ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಗಝಲ್

ಗಝಲ್ ಎ. ಹೇಮಗಂಗಾ ಬೆರಳುಗಳು ಯಾಂತ್ರಿಕವಾಗಿ ಹೂ ಕಟ್ಟುತ್ತಿವೆ ಮನಸೆಲ್ಲೋ ಕಳೆದುಹೋಗಿದೆಕಂಗಳು ಬರುವಿಕೆಯನ್ನೇ ನಿರೀಕ್ಷಿಸುತ್ತಿವೆ ಮನಸೆಲ್ಲೋ ಕಳೆದುಹೋಗಿದೆ ಪ್ರೀತಿ, ಪ್ರೇಮದಲ್ಲಿನ ಸುಖವೇನೆಂದು ತೋರಿಸಿಕೊಟ್ಟವನು ನೀನುಸವಿನೆನಪಲಿ ಅಧರಗಳು ಬಿರಿಯುತ್ತಿವೆ ಮನಸೆಲ್ಲೋ ಕಳೆದುಹೋಗಿದೆ ನಿನಗಾಗೇ ಮಿಡಿಯುವ ಹೃದಯದಲಿ ನೂರೆಂಟು ತವಕ, ತಲ್ಲಣಗಳುಧಮನಿಗಳು ನಿನ್ನ ಹೆಸರನ್ನೇ ಜಪಿಸುತ್ತಿವೆ ಮನಸೆಲ್ಲೋ ಕಳೆದುಹೋಗಿದೆ ಕಣ್ರೆಪ್ಪೆಯೊಳು ಅವಿತಿಹ ಕನಸು ನನಸಾಗಲು ಕಾಯುವ ಕಾಯಕವಿದುಕಾಲದ ಘಳಿಗೆಗಳು ತಮ್ಮಂತೆ ಸರಿಯುತ್ತಿವೆ ಮನಸೆಲ್ಲೋ ಕಳೆದುಹೋಗಿದೆ ವರ್ಷಗಳು ಉರುಳಿದರೇನು ಹೇಮ ಳ ಒಲವಿಗೆಂದೂ ಮುಪ್ಪು ಬಾರದುತನುವಿನ ಕಣಕಣಗಳೂ ಹಂಬಲಿಸುತ್ತಿವೆ ಮನಸೆಲ್ಲೋ ಕಳೆದುಹೋಗಿದೆ *****************************

ಗಝಲ್ Read Post »

ಕಾವ್ಯಯಾನ

ಎದೆ ಮಾತು

ಕವಿತೆ ಎದೆ ಮಾತು ನೀ.ಶ್ರೀಶೈಲ ಹುಲ್ಲೂರು ಕಣ್ಣ ಕೊಳದಲದೋನಮ್ಮೊಲವ ಬಾತುಅವುಗಳೇ ಹೇಳುತಿವೆನನ್ನೆದೆಯ ಮಾತು ಬಾನ ಸಾಗರದಲ್ಲಿನೀ ಹೊಳೆವ ತಾರೆಬೆಳದಿಂಗಳಮಲಿನಲಿನಿರುಕಿಸುವೆ ಬಾರೆ ಸೊಂಪಾದ ತಣ್ಣೆಳಲುನಿನ್ನ ಎದೆ ಬನದಿಬಿರುಬಿಸಿಲು ಅಲ್ಲಿರಲಿವಿರಹ ಕಾನನದಿ ಮಿರುಗುವಾ ಚಂದ್ರನನಗೆಯಾಟ ನೋಡುಮೋಡಗಳ ಹಿಗ್ಗಿನಲಿನಮ್ಮೊಲವ ಹಾಡು ನದಿ ದಡದಿ ಸೊಗಸುನವಿಲ ನಲಿದಾಟಹಕ್ಕಿಗಳ ಕಲರವವುಅದು ರಮ್ಯ ನೋಟ ಒಂಟಿ ಪಯಣ ಸಾಕಿನ್ನುಜೊತೆಯಾಗಿ ಇರುವವರುಷದಿ ಕಂದನ ಕೇಕೆಮಡಿಲಲ್ಲೆ ತರುವ **************************************

ಎದೆ ಮಾತು Read Post »

ಕಾವ್ಯಯಾನ

ಮಧುವಣಗಿತ್ತಿ

ಕವಿತೆ ಮಧುವಣಗಿತ್ತಿ ಎಚ್ ಕೆ ನಟರಾಜ ಆಕೆಗೆ ದಿನವೂಸಿಂಗರೀಸುವುದೇ ಕೆಲಸಅಕ್ಷರಗಳಿಗೆ ಉಡುಗೆ ತೊಡಿಸಿಅಲಂಕರಿಸಿ ಬಿಳಿ ಹಾಳೆಯ ಮೇಲೇ ಚಿತ್ತಾರಬಿಡಿಸಿ ಶಾಯಿಯ ರಂಗೋಲಿಸೂರ್ಯ ಚಂದ್ರನ ಹೂ ಮಾಲೆ ಮಾಡಿ..ನಕ್ಷತ್ರಗಳನ್ನು ಕೆನ್ನೆ ರಂಗಾಗಿಸಿಭಾವನೆಗಳಿಗೆ ಬಣ್ಣದುಡುಗೆ ತೊಡಿಸಿಕಾಮವನ್ನು.. ಕಾಮವಿಲ್ಲದ ಹೃದಯಭತ್ತಳಿಕೆಯ ಬಾಣವಾಗಿಸಿಪದಪುಂಜದರಮನೆಗೆ ಲಗ್ಗೆಹೀಗೆ ಈ ಮಧುವಣಗಿತ್ತಿ.. ಅಲ್ಲಿಂದ ಇಲ್ಲಿಇಲ್ಲಿಂದ ಅಲ್ಲಿ ಶಭ್ಧಗಳ ನರ್ತನ. ಆಡಂಭರದಾಟಕೂ ಅಂಕುಶ ತೊಡಿಸಿಪ್ರೇಮನಿವೇದನೆ.ಕನಸುಗಳ ಬಗೆದು ಅಲ್ಲೊಂದಷ್ಟು ಹೆಕ್ಕಿಮನದಾಳದಿ ಕುಕ್ಕಿ…. ದುಃಖದಲ್ಲಿ ಬಿಕ್ಕಿ..ನಗುವಿನಾಳದಲಿ ಒಲವ ಬಿತ್ತಿ.. ನಾಚಿನೀರಾದ ರಂಗಿನೋಕುಳಿಯಲಿ..ಮತ್ತೊಂದಷ್ಟು ಪದಗಳ ಮಾಲೆಕಟ್ಟಿ..ಜೋಡಿಸಿ.. ಕಾಡಿಸೀ.. ಕೂಡಿಸಿ.. ತೊಡಿಸಿಅಂತೂ.. ಒಂದು ಅಂತಿಮ ಸ್ಪರ್ಶ..ಭಾವದೊಲುಮೆಗೆ ಆಕರ್ಷಕ..ತೂರಲಿ ಕಣ್ಣೋಳೊಗೆ.. ಕವಿಭಾವಕೆಕವನದ ದೃಶ್ಯಹೀಗೆ ಮಧುವಣಗಿತ್ತಿ ಮೆರವಣಿಗೆಯಲಿಅಕ್ಷರ ಸೃಷ್ಟಿಯ ಭಾಷ್ಯ ****************************

ಮಧುವಣಗಿತ್ತಿ Read Post »

ಕಾವ್ಯಯಾನ

ನಾವು ಆಧುನಿಕ ಗಾಂಧಾರಿಯರು

ಕವಿತೆ ನಾವು ಆಧುನಿಕ ಗಾಂಧಾರಿಯರು ಲಕ್ಷ್ಮೀ ಪಾಟೀಲ್ ನೀನು ಅಪಾರವಾದ ಆತ್ಮವಿಶ್ವಾಸತುಂಬಿ ತುಳುಕುವಹೆಣ್ಣೆಂದುಆಗಾಗ ಹೇಳಿನನ್ನನ್ನು ಬಲೂನಿನಂತೆಉಬ್ಬಿಸಿದಾತಖರೇಖರೇಆತ್ಮವಿಶ್ವಾಸದಲ್ಲೇಬದುಕಲು ನಿಂತಾಗ ಬಲೂನಿನ ಹವಾ ತೆಗೆದುಇನ್ನೆಂದೂಉಬ್ಬದಂತೆ ಮಾಡಿ ಎಸೆದು ಬಿಟ್ಟ ಹೆಣ್ಣನ್ನು ಒರೆಗೆ ಹಚ್ಚಿ ಆತಹೀಗೆಯೇ ಉಬ್ಬಿಬದುಕುತ್ತತನಗೊಂದು ಸ್ವಚ್ಛಂದ ಇತಿಹಾಸ ಕಟ್ಟಿಕೊಂಡಆತ್ಮವಿಶ್ವಾಸದಿಂದಹೆಜ್ಜೆ ಹಾಕುವಹೆಣ್ಣನ್ನು ತುಳಿಯುತ್ತಲೇಬಂದ ಕಣ್ಣಿಗೆ ಪಟ್ಟಿ ಕಟ್ಟಿಕೊಳ್ಳದಿದ್ದರೂಇವರೆಲ್ಲಕರಾಮತ್ತುಗಳನ್ನುಕಣ್ಣಲ್ಲಿ ಹಿಂಗಿಸಿಕೊಂಡುಒಡಲಲ್ಲಿ ಅರಗಿಸಿಕೊಂಡುಕಂಡು ಕಾಣದಂತೆ ಉಂಡು ಉಗುಳದಂತೆಒಡಲದಾವಾಗ್ನಿಗಳನ್ನುಒಳಗೇಒತ್ತಿಕೊಳ್ಳುವನಾವು ಆಧುನಿಕ ಗಾಂಧಾರಿಯರಾಗಿದ್ದೇವೆ ಅಕ್ಷರಲೋಕಕ್ಕೆತೆರೆದುಕೊಂಡಿದ್ದುಪ್ರಜಾಪ್ರಭುತ್ವದಲ್ಲಿಸಂಖ್ಯೆ ಮುಖ್ಯವಾದದ್ದೇಪವಾಡವೆಂಬಂತೆಈಗಲೂ ಮೀಸಲಾತಿ ಆದ್ಯತೆಗೆಧನ್ಯರಾಗಲುಕುರುಡು ಪುರುಷನ ಮುಂದೆ ಬೇಡಿಕೆ ಇಟ್ಟುಕಣ್ಣಿದ್ದೂಕುರುಡರಂತೆಅವನ ನೆರಳಹಿಂಬಾಲಿಸುವನಾವು ಆಧುನಿಕ ಗಾಂಧಾರಿಯರಾಗಿದ್ದೇವೆ **************************************

ನಾವು ಆಧುನಿಕ ಗಾಂಧಾರಿಯರು Read Post »

ಇತರೆ

ಚಂಸು ಪಾಟೀಲ ಎಂಬ ‘ರೈತಕವಿ’

ಚಂಸು ಪಾಟೀಲ ಎಂಬ ‘ರೈತಕವಿ’ ಚಂಸು ಪಾಟೀಲ ಎಂಬ ‘ಪತ್ರಕರ್ತ’, ‘ರೈತಕವಿ’ಯೂ..!ಮತ್ತವನ ‘ಬೇಸಾಯದ ಕತಿ’ಯೂ.!! ನನ್ನ ಪ್ರೀತಿಯ ಗೆಳೆಯ ಚಂಸು ಪಾಟೀಲ ಮೊನ್ನೆ ಭೇಟಿಯಾಗಿದ್ದ ಹಾವೇರಿಯಲ್ಲಿ. ಚಂಸು ತನ್ನ ಇತ್ತೀಚಿನ ಪುಸ್ತಕವಾದ ‘ಬೇಸಾಯದ ಕತೆ’ ಓದಲು ನನಗೆ ಕೊಟ್ಟ. ನನಗೆ ಈ ‘ಬೇಸಾಯದ ಕತಿ’ ಓದುತ್ತಿದಂತೆ ಇದರ ಬಗೆಗೇನೆ ಒಂದು ಬರಹ ಮಾಡೋಣವೆನಿಸಿ ಒಂದು ಈ ಬರಹವನ್ನು ಮಾಡಿದೆ.ಈ ಚಂಸು ‘ರೈತಕವಿ’ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ ಆಗಿದೆ.ಅಷ್ಟೇ ಅಲ್ಲ ಈ ಚಂಸು ಪತ್ರಕರ್ತನೂ ಹೌದು. ಈ ಇವನ ಬಗೆಗಿನ ಮಾಹಿತಿ ಮತ್ತು ಬರಹ ಇಲ್ಲಿದೆ ನೋಡಿ… ಈ ಚಂಸುನು ಬೇಸಾಯದ ಬಗೆಗೆ ಲೇಖಕನಾಗಿ ದೂರದಿಂದ ಕಂಡು ಬರೆದಿಲ್ಲ. ಅದರ ಒಂದು ಭಾಗವಾಗಿಯೇ ಬರೆಯುತ್ತಾ ಹೋಗುತ್ತಾನೆ. ಸ್ವಯಂ ಕೃಷಿಗಿಳಿದಿರುವ ಈ ಚಂಸು ಬೇಸಾಯದ ಲಾಭ-ನಷ್ಟಗಳನ್ನು ಒಂದೆಡೆ ಹೇಳುತ್ತಾನೆ. ಹಾಗೆಯೇ ಕೃಷಿ ಬದುಕಿನ ಜೊತೆಗೆ ಸುತ್ತಿಕೊಂಡಿರುವ ಬೇರೆ ಬೇರೆ ಹಬ್ಬ, ಉತ್ಸವ ಇತ್ಯಾದಿಗಳನ್ನು ವಿವರಿಸುತ್ತಾನೆ. ಹಾಗೆಯೇ ಕೃಷಿಯ ಜೊತೆಗೆ ಅಂಟಿಕೊಂಡ ಸಂಬಂಧಗಳನ್ನೂ ತೆರದಿಡುವ ಪ್ರಯತ್ನ ಮಾಡುತ್ತಾನೆ. ಅಂದರೆ ಬೇಸಾಯದ ಬೇರೆ ಬೇರೆ ಮಗ್ಗುಲುಗಳು ಈ ಲೇಖಕನಿಂದ ಪರಿಚಯವಾಗುತ್ತಾ ಹೋಗುತ್ತದೆ. ಇದೇ ಸಂದರ್ಭದಲ್ಲಿ ನಾವಿಂದು ಯಾವ ಹಬ್ಬ ಹರಿದಿನ, ಉತ್ಸವಗಳನ್ನು ಆಚರಿಸುತ್ತಿದ್ದೇವೆಯೋ ಅವೆಲ್ಲವೂ ಬೇಸಾಯದಿಂದ ತನ್ನ ನಂಟನ್ನು ಕಳೆದುಕೊಂಡು ಸ್ವತಂತ್ರವಾಗುತ್ತಿರುವುದು, ಮತ್ತು ಕೃತಕ ಆಚರಣೆಯಾಗಿ‌ ಮುಂದುವರಿಯುತ್ತಿರುವುದನ್ನೂ ಈ ‘ಬೇಸಾಯದ ಕತಿ’ ಕೃತಿಯು ಚರ್ಚಿಸುತ್ತದೆ.ಶ್ರಾವಣದಿಂದ ಮಹಾನವಮಿಯವರೆಗಿನ ಹಬ್ಬಗಳಲ್ಲಿ ಮಣ್ಣನ್ನು ಪೂಜಿಸುವಂಥವೇ. ಮಣ್ಣೆತ್ತಿನ ಅಮವಾಸೆಗೆ ಮಣ್ಣೆತ್ತು ಮಾಡಿ ಪೂಜಿಸುವುದು. ನಾಗರ ಪಂಚಮಿಗೆ ಹುತ್ತಕ್ಕೆ ಹಾಲೆರೆಯುವುದು. ಗಣಪ ಕೂಡ ಮಣ್ಣೆ. ನಮ್ಮ ಅಡುಗೆ, ಉಡುಗೆ, ತೊಡುಗೆಗಳಿಗೆ ಬೇಕಾದ ಮೂಲ ಪದಾರ್ಥ, ಪರಿಕರಗಳನ್ನು ಒದಗಿಸುವ ಮಣ್ಣನ್ನು ಪೂಜಿಸುವ, ಮಣ್ಣಿನ ಋಣಕ್ಕೆ ಕೃತಜ್ಞತೆ ಸಲ್ಲಿಸುವ ಅರ್ಥಪೂರ್ಣ ಆಚರಣೆ. ಇಂತಹ ಹಲವು ಚಿಂತನೆಗಳು ಈ ಕೃತಿಯಲ್ಲಿದೆ… ಚಂಸು ಪಾಟೀಲ ಕೃಷಿಯನ್ನೇ ಜೀವನ ವಿಧಾನವಾಗಿ ಸ್ವೀಕರಿಸಿರುವ ಲೇಖಕ. ಚಂಸು ಪಾಟೀಲನು (ಚಂದ್ರಶೇಖರ ಸುಭಾಶಗೌಡ) ಮೂಲತಃ ರಾಣೇಬೆನ್ನೂರು ತಾಲೂಕಿನ ಕೂನಬೇವು (ಅಂಚೆ: ಕಜ್ಜರಿ) ಗ್ರಾಮದವನು. ಬಿ.ಎ. ಪದವೀಧರನು. ಕೆಲವು ಕಾಲ ನಾನು ಮೊದಲೇ ಹೇಳಿದಂತೆ ‘ಸಂಯುಕ್ತ ಕರ್ನಾಟಕ, ‘ಕ್ರಾಂತಿ’ ದಿನಪತ್ರಿಕೆಯಲ್ಲಿ ಹಾಗೂ ‘ನೋಟ’ ವಾರಪತ್ರಿಕೆಯಲ್ಲಿ ಸಹ ಸಂಪಾದಕರಾಗಿದ್ದವನು. ಕೃಷಿ ಸಮಸ್ಯೆ ಕುರಿತು ಬರೆದ ಕೃತಿಯಾದ ‘ಬೇಸಾಯದ ಕತಿ’ಯು ನನ್ನ ತೀರಾ ಮನಮುಟ್ಟಿದ ಕೃತಿಯಾಗಿದೆ. ಈ ಕೃತಿಗೆ ಕನ್ನಡ ಸಾಹಿತ್ಯ ಅಕಾಡೆಮಿಯ 2018 ರ ಸಾಲಿನ ಸಿಂಪಿ ಲಿಂಗಣ್ಣ ದತ್ತಿ ಪ್ರಶಸ್ತಿಯೂ ಲಭಿಸಿದೆ. ಇತನ ಇನ್ನುಳಿದ ಕೃತಿಗಳಾದ ‘ಗೆಳೆಯನಿಗೆ’ (1995), ‘ಕೆಂಪುಕಂಗಳ ಹಕ್ಕಿ ಮತ್ತದರ ಹಾಡು’ (2004), ‘ಅದಕ್ಕೇ ಇರಬೇಕು’ (2009) ಅಲ್ಲದೇ ಇವನ ಕವನ ಸಂಕಲನಗಳೂ ಓದಿಸಿಕೊಂಡು ಹೋಗುವ ಕೃತಿಗಳಾಗಿವೆ.ಪ್ರಸ್ತುತವಾಗಿ ಸದ್ಯ ತನ್ನ ಕುನಬೇವ ಗ್ರಾಮದಲ್ಲೇ ಕೃಷಿಕರಾಗಿನಾಗಿದ್ದಾನೆ. ಸ್ವಯಂ ರೈತಕವಿಯಾಗಿ ರೈತಾಪಿ ಜಗತ್ತಿನ ಕೃಷಿ ಜಾಗೃತಿಯಲ್ಲಿ ತೊಡಗಿಕೊಂಡಿದ್ದಾನೆ. ಇರಲಿ ಈಗ ಇವನ ಅತ್ಯುತ್ತಮ ಕೃತಿಯಾದ ಅಲ್ಲದೇ ನನಗೆ ತೀರಾ ಹಿಡಿಸಿದ ಕೃತಿಯಾದ ‘ಬೇಸಾಯದ ಕತಿ’ ಬಗೆಗೆ ನೋಡೋಣ… ‘ಬೇಸಾಯದ ಕತಿ’… ಚಂಸು ಪಾಟೀಲ ಎಂಬ ಯುವ ಲೇಖಕನ ತವಕ ತಲ್ಲಣಗಳ ಲೇಖನ ಸಂಗ್ರಹವಿದು ‘ಬೇಸಾಯದ ಕತಿ’. ಬಾಲಕನಾಗಿದ್ದಾಗ ಶಾಲೆಯಲ್ಲಿ ಇದ್ದಾಗಲೇ ಕವಿತೆ ಬರೆದ ಪಾಟೀಲ ಎಂಬತ್ತು-ತೊಂಬತ್ತರ ದಶಕದಲ್ಲಿ ಕನ್ನಡದ ಪ್ರಮುಖ ಬರಹಗಾರರನ್ನು ಓದಿ ಕೊಂಡಿದ್ದ ಕವಿ ಹೃದಯಿಗೆ ತಮ್ಮ ತಂದೆ ಆಧುನಿಕ ಕೃಷಿ ಪದ್ದತಿಯಿಂದ ಸಾಲದ ಸುಳಿಯಲ್ಲಿ ಬಿದ್ದು ವಿಲವಿಲ ಒದ್ದಾಡುವುದು ಕಂಡು ತಲ್ಲಣಿಸಿ ಹೋಗುತ್ತಾನೆ. ತನ್ನಜ್ಜನ ಪಾರಂಪರಿಕ(ಕೃಷಿ) ಕಮತದಿಂದ ನಿರುಮ್ಮಳವಾಗಿದ್ದು ಕಂಡ ಈ ತರುಣನಿಗೆ ತಾನು ಪಾರಂಪರಿಕ ಕಮತಕ್ಕೆ ಇಳಿದು ತನ್ನಪ್ಪನನ್ನು ಸಾಲದ ಸುಳಿಯಿಂದ ಹೊರತರಲು ಯತ್ನಿಸುತ್ತಾನೆ. ಇನ್ನು ಓದು ಓದಿಸುವೆ ಯಾವುದಾದರೂ ಕೆಲಸ ಹಿಡಿದು ಸುಖವಾಗಿರು ಎನ್ನುವ ತಂದೆ..!ಆದರೆ ನಿರಂತರ ಪರಿಶ್ರಮ, ಪ್ರಯತ್ನ ಮತ್ತು ಅಚಲವಾದ ಆತ್ಮವಿಶ್ವಾಸವೇ ಕೃಷಿ, ಇಂಥ ಕೃಷಿಯಿಂದಲೇ ಮೊದಲಾದದ್ದು ನಾಗರೀಕತೆ, ಸಂಸ್ಕೃತಿ ಇತ್ಯಾದಿ, ಹಾಗಾಗಿಯೇ ಕೃಷಿಗೂ ಸಂಸ್ಕೃತಿಗೂ ಅವಿನಾಭಾವ ಸಂಬಂಧವಿದೆವೆನ್ನುವ ಚಂಸು. ಕೃಷಿ ಹೊರತುಪಡಿಸಿದ ಸಂಸ್ಕೃತಿ ಪ್ರೇತವೆನ್ನುವ ಚಂಸುನು ಕೃಷಿಯಲ್ಲೇ ಉಜ್ವಲ ಮತ್ತು ಅರ್ಥಪೂರ್ಣ ಬದುಕು ಕಾಣಲು ಹಂಬಲಿಸಿ ಆ ಪ್ರಯತ್ನದಲ್ಲಿ ಸಫಲನೂ ಆಗುತ್ತಾನೆ..! ಸಂಸ್ಕೃತಿಯನ್ನು ಹೊರತುಪಡಿಸಿದ ಕೃಷಿ ಹೆಣಭಾರವೆನ್ನುವ ರೈತಕವಿ ಚಂಸು..! ಅಂದಂತೆಯೇಈಗ ಆಗಿರುವುದು ಹೀಗೆಯೇ.ಇಪ್ಪತ್ತು ವರ್ಷಗಳ ಹಿಂದೆ ಹೋದರೆ ಆಗ ಕೃಷಿ ಮತ್ತು ಸಂಸ್ಕೃತಿ ಯ ಸಂಬಂಧ ಅವಿನಾಭಾವ ಬಂಧವಿತ್ತು. ಅಲ್ಲಿಂದೀಚೆಗೆ ಇವೆರಡೂ ಪರಸ್ಪರ ವಿರುದ್ಧ ದಿಕ್ಕಿನತ್ತಲೇ ಸಾಗಿವೆ, ಈ ವೈರುಧ್ಯದ ಬದುಕೆ ಇವತ್ತು ನಮ್ಮ ರೈತರನ್ನು ಅಸಹಾಯಕರನ್ನಾಗಿಸಿದೆ. ಇನ್ನಿಲ್ಲದಷ್ಟು ಹತಾಶರನ್ನಾಗಿಸಿದೆ. ಶ್ರಾವಣದಿಂದ ಮಹಾನವಮಿವರಿಗಿನ ಹಬ್ಬಗಳೆಲ್ಲ ಮಣ್ಣನ್ನು ಪೂಜಿಸುವಂಥವೇ. ಮಣ್ಣೆತ್ತಿನ ಅಮಾವಾಸ್ಯೆಗೆ ಮಣ್ಣೆತ್ತು ಮಾಡಿ ಪೂಜಿಸುವುದು. ನಾಗರ ಪಂಚಮಿಗೆ ಹುತ್ತಕ್ಕೆ ಹಾಲೆರೆಯುವುದು. ಗಣಪ ಕೂಡಾ ಮಣ್ಣೆ..! ಇದು ಉಂಡುಟ್ಟು ಸಂಭ್ರಮಿಸಲಿಕ್ಕೇ ಮಾತ್ರ ಬೆಳೆದುಬಂದ ಪರಂಪರೆಯಲ್ಲ. ನಮ್ಮ ಅಡುಗೆ, ಉಡುಗೆ, ತೊಡುಗೆಗಳಿಗೆ ಬೇಕಾದ ಮೂಲ ಪದಾರ್ಥ..! ಪರಿಕರಗಳನ್ನು ಒದಗಿಸುವ ಮಣ್ಣನ್ನು ಪೂಜಿಸುವ, ಮಣ್ಣಿನ ಋಣಕ್ಕೆ ಕೃತಜ್ಞತೆ ಸಲ್ಲಿಸುವ ಅರ್ಥಪೂರ್ಣ ಆಚರಣೆ. ಈ ಆಚರಣೆಗಳನ್ನು ಬಿಟ್ಟಿಲ್ಲ. ಆದರೆ, ಇಂದು ನಂಬಿಕೆಗಳಿಗೆ ಮಣ್ಣು ಕೊಟ್ಟಿದ್ದವೆಂದು ‘ಬೇಸಾಯದ ಕತಿ’ಯಲ್ಲಿ ಹೇಳುವ ಚಂಸು ಒಬ್ಬ ಮಣ್ಣಿನ ಆರಾಧಕ, ರೈತಕವಿ ಅಂತಲೇ ನನ್ನ ಅಭಿಪ್ರಾಯ ಮಾತ್ರವಲ್ಲ ಈತನನ್ನು ತೀರ ಹತ್ತಿರದಿಂದ ಕಂಡ ಬಹು ಜನರ ಅನುಭವವೂ ಆಗಿದೆ. ಇನ್ನು ಮಣ್ಣಿನ ಸಂಸ್ಕೃತಿಯಿಂದ ದೂರ ಹೋಗಿರುವ ನಗರ ಪಟ್ಟಣಗಳಲ್ಲಿ ಈ ಹಬ್ಬಗಳು ಇನ್ನೂ ವಿಜೃಂಭಣೆಯಿಂದ, ವೈಭವದಿಂದ ಜರಗುವುದನ್ನು ನೋಡಿದರೆ ಇದೆಲ್ಲ ಹಾಸ್ಯಾಸ್ಪದ ಎನ್ನಿಸುತ್ತದೆ. ನಾವು ಇವತ್ತು ಮಾಡುವುದು ಸರಿ ಎಂದಿಟ್ಟುಕೊಳ್ಳೋಣ. ಮತ್ತೇಕೆ ಬೇಕು ನಮ್ಮೀ ಮಣ್ಣಿನ ದೇವರಿಗೆ ಹೋಳಿಗೆ. ಕಡುಬು ಪಾಯಸ..? ಎಂದು ಕೇಳುವ ಚಂಸು ಅವರಿಗೂ ಮೊನೋಕ್ರೋಟೋಫಾಸೋ, ಇಮಿಡಾಕ್ಲೋರಿಫೈಡೋ, ಯೂರಿಯಾವನ್ನೊ, ಡಿಎಪಿಯನ್ನೋ ನೈವೇದ್ಯವಾಗಿ ಅರ್ಪಸಬಹುದಲ್ಲವೆಂದು ಕೇಳುತ್ತಾನೆ..! ಹೀಗೆ ಕೇಳುವ ಈತನ ಪ್ರಶ್ನೆ ನಿಜಕ್ಕೂ ವಾಸ್ತವವಾದ ಪ್ರಾಕೃತಿಕ ಬದುಕಿನ ಪ್ರಶ್ನೆಯೇ ಆಗಿದೆ. ಇಷ್ಟೆಲ್ಲಾ ತಿಳುವಳಿಕೆ ಇರುವ ವ್ಯಕ್ತಿಗೇ ದಳ್ಳಾಳಿಗಳು ಮೋಸ ಮಾಡುತ್ತಾರೆ ಅಂದರೆ ನೀವು ನಂಬಲಿಕ್ಕಿಲ್ಲ!ಆ ಮೋಸಗಾರನಿಗೆ ಮೆಟ್ಟಿನಲ್ಲಿ ಹೊಡೆದು. ಪಟ್ಟಭದ್ರ ಹಿತಾಸಕ್ತಿಗಳ ನ್ಯಾಯ ಪಂಚಾಯಿತಿಯಲ್ಲಿ ಚಂಸು ಪಾಟೀಲನು ಗೆದ್ದು ಎದ್ದು ಬಂದಿದ್ದ ರೋಮಾಂಚಮಕಾರಿ ಅಧ್ಯಾಯವನ್ನು ನೀವು ಈ ‘ಬೇಸಾಯದ ಕತಿ’ ಕೃತಿಯನ್ನು ಓದಿಯೇ ತಿಳಿಯಬೇಕು. ಹಸಿರು ಕ್ರಾಂತಿ ನಮ್ಮ ಕೃಷಿಯನ್ನು ಮಾತ್ರ ಬದಲಿಸಿಲ್ಲ. ನಮ್ಮ ಆಚಾರ-ವಿಚಾರಗಳನ್ನು ಬದಲಿಸಿದೆ. ನಮ್ಮ ಬದುಕಿನ ನಂಬಿಕೆಗಳನ್ನು ನಮಗರಿವಿಲ್ಲದಂತೆಯೇ ಬುಡಮೇಲು ಮಾಡಿದೆ. ಈ ದ್ವಂದ್ವದ ಬದುಕು. ಆಧುನಿಕತೆಯ ಅತೀ ವ್ಯಾಮೋಹವೇಯಾಗಿದೆ. ಲಾಭ ಬಡುಕರ ಲಗಾಮಿನಲ್ಲಿ ಓಡುತ್ತಿರುವ ತಂತ್ರಜ್ಞಾನದ ಸುಳಿಯಲ್ಲಿ ನಾವು ನಮ್ಮತನವನ್ನು ಕಳೆದುಕೊಂಡಿದ್ದೆವೆಂದು ಪರಿತಪಿಸುವ ಚಂಸು ನಾವು ಹಬ್ಬಕ್ಕೆ ತಂದ ಹರಿಕೆಯ ಕುರಿಗಳಾಗಿದ್ದೆವೆಂದೇ ಪರಿತಪಿಸುತ್ತಾನೆ.ಮತ್ತೆ ಮತ್ತೆ ಮಾರ್ಕೆಟ್‌ ನ ತಳಿರಿಗೆ ಹಾತೊರೆಯುತ್ತಲೇ ಇದ್ದವೆಂದು ಗೋಳಿಡುತ್ತಾನೆ. ರೋಹಿಣಿ ಅಥವಾ ಮೃಗಶಿರಾ ಮಳೆ ಆಯಿತೆಂದರೆ ಮೆಣಸಿನ ಅಗಿ ಹಚ್ಚುವ ಹೊಲಕ್ಕೆ ಈರುಳ್ಳಿ ಚೆಲ್ಲಿ ಎರಡು ಎರಡೂವರೆ ಅಡಿ ಅಂತರದಲಿ ಸಾಲು ಎಬ್ಬಿಸುತ್ತಿದ್ದರು. ಅರಿದ್ರಾ ಮಳೆ ಬರುವಷ್ಟರಲ್ಲಿ ಎರಡು ದೊಡ್ಡ ಮಳೆ ಬಂದಿರೋದು ಭೂಮಿಯೂ ತಂಪಾಗಿ ವಾತಾವರಣದಲ್ಲಿ ತಂಪು ಸೂಸುತ್ತಿರುವ ಸಮಯವದು. ಜುಲೈ ತಿಂಗಳಿಗೆ ಆಗಲೇ ಮುಂಗಾರು ಆರಂಭವಾಗಿ ಪೂರ್ವಾಭಿಮುಖವಾಗಿ ಚಲಿಸುವ ನೈರುತ್ಯ ಮಾರುತದ ಮೋಡಗಳ ಪರಿಣಾಮ ದಿನಗಳಲ್ಲಿ ಆಗಾಗ ಮಳೆ ಸೆಳಕುಗಳು ಓಡಾಡುತ್ತಲೇ ಇರುತ್ತಿದ್ದವು. ಗಿಡ ಹಚ್ಚಲು ಇದು ಸೂಕ್ತ ಕಾಲ. ‘ಆದ್ರಿ ಮಳೆಗೆ ಹಚ್ಚಿದರೆ ಆರು ಕಾಯಿ ಹೆಚ್ಚು’ ಎಂಬ ಗಾದೇನೇ ಇದೆ .ಅರಿದ್ರಾ ಮಳೆ ಶುರುವಾಗುತ್ತಲೆ ಈರುಳ್ಳಿ ಚೆಲ್ಲಿದ ಹೊಲಕ್ಕೆ ಮೆಣಸಿನ ಕಾಯಿ ಅಗಿ ಹಚ್ಚುತ್ತಿದ್ದರು ಆಗ ಮತ್ತೇ ಆ ಹೊಲಕ್ಕೆ ಹುಬ್ಬಿ ಮಳೆ ಬಂದಾಗ ಸಣ್ಣ ಹತ್ತಿ ಅಂದರೆ ನಮ್ಮ ದೇಸಿ ಜೈಧರ ಹತ್ತಿ ಬೀಜ ಊರುತ್ತಿದ್ದರು. ಹೀಗೆ ಒಂದೇ ಹೊಲದಲ್ಲಿ ಬೇರೆ ಬೇರೆ ಕಾಲಮಾನಕ್ಕೆ ಮತ್ತು ಹವಾಮಾನಕ್ಕೆ ಬೆಳೆವ ಪ್ರಮುಖ ಮೂರು ಬೆಳೆಗಳನ್ನು ಅವರು ಅಂದರೆ ನಮ್ಮ ಹಿರಿಕರು ಬೆಳೆಯುತ್ತಿದ್ದರು. ಈಗ ಹೈಬ್ರಿಡ್ ಬಂದು ಮಿಶ್ರ ಬೆಳೆ ಹಾಳಾಯಿತು. ಹೈಬ್ರಿಡ್ ಹಾಗೂ ಬಿಟಿ ಬಂದ ಮೇಲೆ ಈ ಅಪೂರ್ವವಾದಂತಹ ಮಿಶ್ರ ಬೆಳೆ ಪದ್ದತಿಯೇ ಮೂಲೆಗುಂಪಾಯಿತು. ಏಕಬೆಳೆ ಪದ್ದತಿಯೇ ಸಾರ್ವಭೌಮವಾಯಿತು. ಬಂದರೆ ಸರಿ ಇಲ್ಲದಿದ್ದರೆ ಬರೆ ಬೀಳುವುದೂ ಸಾಮಾನ್ಯವಾಯಿತು ಎಂದು ರೈತಕವಿ ಚಂಸು ಪರಿತಪಿಸುತ್ತಾನೆ. ನಲವತ್ತು ವರ್ಷಗಳ ಹಿಂದೆ ಸುರುವಾದ ಬಾವಿ ನೀರಾವರಿಯ ಸಂದರ್ಭದಲ್ಲಿಯೇ ಹಸಿರು ಕ್ರಾಂತಿಯ ಘೋಷಣೆ ಮೊಳಗಿತು. ಆಗ ನನ್ನೂರಲ್ಲಿ ಸುಮಾರು ಇಪ್ಪತ್ತು-ಇಪ್ಪತ್ತೈದು ಬಾವಿಗಳಿದ್ದವು. ಆರಂಭದಲ್ಲಿ ಬಾವಿ ತುಂಬ ನೀರು ಇರುತ್ತಿತ್ತು. ಹಗಲಿಡೀ ವಿದ್ಯುತ್ ಇರುತ್ತಿತ್ತು. ಹೊಲಗಳೆಲ್ಲ ಹಸಿರಿನಿಂದ ಕಂಗೊಳಿಸುತ್ತಿದ್ದವು. ಸಂಜೆಗೆ ಬಾವಿ ಖಾಲಿಯಾದರೂ ಬೆಳಕು ಹರಿಯುವಷ್ಟರಲ್ಲಿ ಬಾವಿಗಳು ತುಂಬಿಕೊಳ್ಳುತ್ತಿದ್ದವುವೆನ್ನುವ ಚಂಸುನ ಈ ಮಾತು ಬರೀ ಚಂಸು ಊರಿಗೆ ಮಾತ್ರ ಸೀಮಿತವಾಗಿಲ್ಲ. ಕೃಷಿವೆನ್ನುದು ಎಲ್ಲಿದೆಯೋ ಅಲ್ಲಲ್ಲಿಲ್ಲೆಲ್ಲಾ ಸಂಬಂಧಿಸಿದ್ದೇಯಾಗಿದೆ. ಹಸಿರು ಕ್ರಾಂತಿ ಅಥವಾ ಆಧುನಿಕ ಕೃಷಿ ಅಮೇರಿಕೆಯ ಕುರುಡು ಅನುಕರಣೆಯೇ ಹೊರತು ಅದರಲ್ಲಿ ಬೇರೆ ಹುರುಳಿಲ್ಲ ಎಂಬುವುದ್ದಕ್ಕೆ ಇವತ್ತು ಪ್ರತಿ ದಿನವೂ ಸಂಭವಿಸುತ್ತಿರುವ ರೈತರ ಆತ್ಮಹತ್ಯೆಗಳೇ ಸಾಕ್ಷಿ. ಹಸಿರು ಕ್ರಾಂತಿಯನ್ನು ಜಾರಿಗೊಳಿಸುವಾಗ ಆದನ್ನು ಕನಿಷ್ಟ ನಮ್ಮತನಕ್ಕೆ ಹಾಗೂ ಪರಿಸರಕ್ಕೆ ಧಕ್ಕೆಯಾಗದ ರೀತಿಯಲ್ಲಿ ಹೇಗೆ ಕಾರ್ಯಗತಗೊಳಿಸಬಹುದೆಂಬ ಕುರಿತು ಯೋಚಿಸಿ ಬೇಕಿತ್ತು.ಸಾವಿರ ಶತಮಾನಗಳ ಕೃಷಿ ಪರಂಪರೆಯ ನಾಡು ನಮ್ಮದು ಎಂಬ ಸಂಗತಿಯಾದರೂ ನೆನಪಿಗೆ ಬರಬೇಕಿತ್ತು. ಪರಿಸರ ನೈರ್ಮಲ್ಯ. ಜಲ ಸಂರಕ್ಷಣೆ. ಅರಣ್ಯ ರಕ್ಷಣೆಯ ಜೊತೆ ಜೊತೆಗೇನೇ ಕೃಷಿಯಲ್ಲಿ ಹೆಚ್ಚು ಇಳುವರಿಯ ಪಡೆಯುವ ಸಾದ್ಯತೆಗಳನ್ನು ಕಂಡುಕೊಳ್ಳಬಹುದಿತ್ತು. ಇವತ್ತು ದೇಶಕ್ಕೆ ಆಹಾರಭದ್ರತೆ ಇದೆ, ಆದರೆ ಅದನ್ನು ಬೆಳೆದು ಕೊಟ್ಟ ಕೃಷಿಕರ ಜೀವಕ್ಕೆ, ಜೀವನಕ್ಕೆ ಬೆಲೆ ಇಲ್ಲ ಅಂದ್ರೆ ಏನು ಅರ್ಥ? ಒಂದು ದೇಶ. ಅಲ್ಲಿನ ಸರ್ಕಾರ ಮತ್ತು ಆ ಸಮುದಾಯದ ಕೃತಘ್ನತೆಯ ವಿರಾಟ್ ಸ್ವರೂಪವಲ್ಲದೇ ಇದು ಮತ್ತೇನು..? ಎಂದು ಚಂಸು ಪಶ್ನಿಸುತ್ತಿರುವುದು ಸಕಾಲಿಕ ಸತ್ಯವೇ ಆಗಿದೆ. ಫುಕುವೋಕಾರ ‘ಒಂದು ಹುಲ್ಲಿನ ಕ್ರಾಂತಿ’ ಪ್ರಕಟವಾಗಿದ್ದು 1975ರಲ್ಲಿ. ಅದು ಕನ್ನಡಕ್ಕೆ ಬಂದಿದ್ದು 1988ರಲ್ಲಿ. ಫುಕುವೋಕಾ ಸಹಜ ಕೃಷಿಯ ಬಗ್ಗೆ ಮಾತಾಡಿ ೪೦ ವರ್ಷಗಳಾದವು. ಈ ನಲವತ್ತು ವರ್ಷಗಳ ನಂತರವೂ ನಾವು ಆಧುನಿಕ ಕೃಷಿಯನ್ನೇ ಅನಿವಾರ್ಯ ಎಂದುಕೊಂಡು, ಪ್ರಕೃತಿಗೆ ಮಾರಕವಾದ ಅದನ್ನೇ ಮುಂದುವರಿಸಿಕೊಂಡು ಹೊರಟಿದ್ದೇವೆ. ಇದು ಇರುಳು ಕಂಡ ಬಾವಿಗೆ ಹಗಲು ಬಿದ್ದರೆಂಬ ಗಾದೆಯನ್ನು ನೆನಪಿಸುವಂತದಾಗಿದೆ. ಇವತ್ತಿನ ಕೃಷಿಯಲ್ಲಿ ಕಾರ್ಮಿಕರ ಪಾಲ್ಗೊಳ್ಳುವಿಕೆ ಕಡಿಮೆಯಾಗುತ್ತಿದೆ. ಬಹುಶಃ ಸರ್ಕಾರದ ಉದ್ದೇಶವೂ ಇದೆ ಎಂದು ಹೇಳಲಾಗುತ್ತಿದೆ. ಕಾರ್ಪೊರೇಟ್ ವಲಯದ ನಿಯಂತ್ರಣಕ್ಕೆ ಬರುವ ರೀತಿಯಲ್ಲಿ ಕೃಷಿಯನ್ನು ಬಗ್ಗಿಸಲಾಗುತ್ತಿದೆ. ಅಥವಾ ಹಿಗ್ಗಿಸಲಾಗುತ್ತಿದೆ. ಸಂಪೂರ್ಣ ಯಾಂತ್ರೀಕರಣದ ನಂತರ ಕೃಷಿಯಲ್ಲಿ ಪಾಲ್ಗೊಳ್ಳುವ ಜನಸಂಖ್ಯೆಯನ್ನು ಶೇ 25 ರೊಳಗೆ ತರುವ ಪ್ರಯತ್ನಗಳ ಕುರಿತ ವರದಿಗಳಿವೆ. ಕೃಷಿಯಿಂದ ಹೊರಬಂದ ಶೇ 40ಕ್ಕೂ ಹೆಚ್ಚು ಜನರಿಗೆ ಬೇರೆ ಬೇರೆ ವಲಯಗಳಲ್ಲಿ ಸ್ಥಿರವಾದ ಉದ್ಯೋಗಗಳ ಲಭ್ಯತೆ ಸಾದ್ಯವೆ..? ಎಂದು ಚಂಸು ಪ್ರಶ್ನಿಸುತ್ತಾನೆ. ಆಗ ಊಟದ ವೇಳೆ ಎಂದರೆ ಹಿಂದಿ ವಾರ್ತಾ ಸುರುವಾಗುವ ಸಮಯ. ಅಲ್ಲಿಗೆ ರೇಡಿಯೋ ಬಂದ್ ಮಾಡಿ ಉಂಡು ಮಲಗಿಬಿಡುತ್ತಿದ್ದೆವು.ಟಿವಿ ಬಂದ ಮೇಲೆ ಅಪ್ಪ ಅವರಿವರ ಮನೆಗೆ ಹೋಗುವುದನ್ನು ನಿಲ್ಲಿಸಿಬಿಟ್ಟ. ಯಾರಾದರೂ ಮನೆಗೆ ಬಂದರೆ ಹಾಂ ಹೂಂ ಅಷ್ಟೇ ಮಾತುಕತೆ. ಎಲ್ಲರ ಕಣ್ಣು, ಮನಸು ಟಿವಿ

ಚಂಸು ಪಾಟೀಲ ಎಂಬ ‘ರೈತಕವಿ’ Read Post »

ಕಾವ್ಯಯಾನ

ದೇವರ ಲೀಲೆ

ಕವಿತೆ ದೇವರ ಲೀಲೆ ಬಾಪು ಖಾಡೆ ನೀಲಿಯ ಹಾಳೆಗೆ ಚಿತ್ರವ ಬರೆದುಮೇಲಕೆ ಎಸೆದಿರುವೆಶಿವನೇ ಮೇಲಕೆ ಎಸೆದಿರುವೆಮೂಡಣ ರವಿಗೂ ಹುಣ್ಣಿಮೆ ಶಶಿಗೂಸ್ನೇಹವ ಬೆಸೆದಿರುವೆಬೆಳಕಿನ ಸ್ನೇಹವ ಬೆಸೆದಿರುವೆ ತುಂಬಿದ ಅಂಬುಧಿ ಅಲೆಗಳ ಮೇಲೆನರ್ತನ ನಡೆಸಿರುವೆಹರನೇ ನರ್ತನ ನಡೆಸಿರುವೆಹಕ್ಕಿಯ ಹಿಂಡಿನ ಮೆತ್ತನೆ ಮೈಗೆಅಂಗಿಯ ತೊಡಿಸಿರುವೆರಂಗಿನ ಅಂಗಿಯ ತೊಡಿಸಿರುವೆ ಬಳುಕುವ ಬಳ್ಳಿಗೆ ಬಣ್ಣದ ಹೂಗಳಚಿತ್ರವ ಬಿಡಿಸಿರುವೆಚಂದದ ಚಿತ್ರವ ಬಿಡಿಸಿರುವೆಕೋಗಿಲೆ ಕಂಠದಿ ಕಾಣದೆ ಕುಳಿತುವೀಣೆಯ ನುಡಿಸಿರುವೆಚೈತ್ರದ ವೀಣೆಯ ನುಡಿಸಿರುವೆ ಎಲ್ಲೊ ಅವಿತು ಸೋಲು-ಗೆಲುವಿನಸೂತ್ರವ ಹಿಡಿದಿರುವೆಜೀವನ ಸೂತ್ರವ ಹಿಡಿದಿರುವೆನಾಟಕವಾಡಿ ಪಾತ್ರವ ಮುಗಿಯಲುಪರದೆಯ ಸರಿಸಿರುವೆಅಂಕದ ಪರದೆಯ ಸರಿಸಿರುವೆ ***********************************

ದೇವರ ಲೀಲೆ Read Post »

ಇತರೆ

ಕಸಾಪಗೆ ಮಹಿಳಾ ಅಧ್ಯಕ್ಷರು

ಕಸಾಪಗೆ ಮಹಿಳಾ ಅಧ್ಯಕ್ಷರು ಒಂದು ಚರ್ಚೆ ಇವತ್ತಿನ ಚರ್ಚೆಯಲ್ಲಿಅನಿಸಿಕೆ ತಿಳಿಸಿರುವವರು ಸುಧಾ ಆಡುಕಳ ಕ. ಸಾ. ಪ. ಕ್ಕೆ ,ಮಹಿಳಾ ಅಧ್ಯಕ್ಷರು ಯಾಕಿಲ್ಲ!!? ಕ. ಸಾ. ಪ. ಕ್ಕೆ ,       ಮಹಿಳಾ ಅಧ್ಯಕ್ಷರು ಯಾಕಿಲ್ಲ!!? ಸ್ಥಾಪನೆಯಾಗಿ ಶತಮಾನಗಳಾದರೂ ಇನ್ನೂ ಕನ್ನಡ ಸಾಹಿತ್ಯ ಪರಿಷತ್ತಿಗೆ ಮಹಿಳಾ ಅಧ್ಯಕ್ಷರು ಯಾಕಿಲ್ಲ!?          ಇಂಥದೊಂದು ಪ್ರಶ್ನೆಯನ್ನು ಮುಂದಿಟ್ಟುಕೊಂಡು ಚರ್ಚೆಯನ್ನಾರಂಭಿಸಿದ ಸಂಗಾತಿ ಪತ್ರಿಕೆಯ ನಿಲುವನ್ನು ತುಂಬು ಹೃದಯದಿಂದ ವಂದಿಸುತ್ತಲೇ, ನನ್ನ ಕೆಲವು ವಿಚಾರಗಳನ್ನು ಸ್ಪಷ್ಟಗೊಳಿಸಬಯಸುತ್ತೇನೆ. ಸಮಾನತೆಯೆಂಬುದು ಸುಲಭವಾಗಿ ರೂಢಿಸಿಕೊಳ್ಳುವ ವಿಷಯವಾಗಿದ್ದರೆ ಮಾನವ ಜನಾಂಗ ನಾಗರಿಕತೆಯ ಉತ್ಕೃಷ್ಟ ಹಂತವನ್ನು ತಲುಪಿದ ಇಂದಿನ ದಿನಗಳಲ್ಲಿಯೂ ಅಸಮಾನತೆಯ ಭಾರದಿಂದ ಕುಸಿಯುತ್ತಿರಲಿಲ್ಲ. ದಿನನಿತ್ಯದ ಸಣ್ಣಪುಟ್ಟ ಅವಕಾಶಗಳಲ್ಲೆಲ್ಲ ಸಮಾನತೆಯನ್ನು ಪ್ರತಿಪಾದಿಸುತ್ತ ಅದನ್ನು ಸಾಧಿಸಿಯೇ ಬಿಟ್ಟೆವು ಎಂಬ ಭ್ರಮೆಯಲ್ಲಿ ತೇಲಾಡಿಸುವುದು ಅಸಮಾನತೆಯ ಲೋಕರೂಢಿಯೇ ಆಗಿದೆ.        ನಿಜವಾದ ಸಮಾನತೆಯ ಪರೀಕ್ಷೆಯಾಗಬೇಕಾದದ್ದು ಅಧಿಕಾರದ ಹಂಚಿಕೆಯ ವಿಷಯದಲ್ಲಿ ಎಂಬುದನ್ನು ಉಪಾಯವಾಗಿ ಮರೆಮಾಚುತ್ತಾ ಅಥವಾ ಅದಕ್ಕೆ ತನ್ನದೇ ಅನೇಕ ಸಮಜಾಯಿಸಿಗಳನ್ನು ನೀಡುತ್ತಾ ಹೋಗುವುದು ಅನೂಚಾನವಾಗಿ ನಮ್ಮ ಸಮಾಜದ ನಡೆಯೇಆಗಿದೆ.       ಯಾವುದೇ ಅಧಿಕಾರಯುತವಾದ ಹುದ್ದೆಯ ಆಯ್ಕೆ ಚುನಾವಣಾ ರಾಜಕೀಯಕ್ಕಿಂತ ಭಿನ್ನವೇನಲ್ಲ. ಗ್ರಾಮ ಪಂಚಾಯಿತಿಯಲ್ಲಿ ಹೆಣ್ಣು ಮಕ್ಕಳಿಗೆ ಮೀಸಲಾತಿ ನೀಡಲು ತೆರೆದ ಮನಸ್ಸನ್ನು ಹೊಂದಿರುವ ವ್ಯವಸ್ಥೆ ಶಾಸಕ ಮತ್ತು ಸಂಸದರನ್ನು ಆಯ್ಕೆ ಮಾಡುವಾಗ ತೋರುವ ಅಸಮಾನತೆಯನ್ನು ಗಮನಕ್ಕೆ ತಂದುಕೊಂಡರೆಸಾಕು, ನಮ್ಮ ಪ್ರಶ್ನೆಗಳಿಗೆ ಸುಲಭವಾಗಿ ಉತ್ತರ ದೊರಕುತ್ತದೆ. ಜಾತಿತಾರತಮ್ಯವನ್ನು ಅಳಿಸಿಬಿಟ್ಟಿದ್ದೇವೆಂದು ಭಾಷಣಮಾಡುತ್ತ, ಮನೆಗೆ ಬಂದವರಿಗೆ ತಮ್ಮದೇ ಪಕ್ಕದಲ್ಲಿ ಊಟವಿಕ್ಕುವ ಮಂದಿ ಮಕ್ಕಳ ಮದುವೆಯ ವಿಚಾರಕ್ಕೆ ಬಂದಾಗ ನಡೆದುಕೊಳ್ಳುವ ರೀತಿಯನ್ನು ಗಮನಿಸದರೂ ಸಾಕು. ಇವೆಲ್ಲವೂ ಸಮಾನತೆಯೊಳಗಿನ ಪೊಳ್ಳುತನವನ್ನು ಬಯಲಿಗೆಳೆಯುತ್ತಲೇ ಇರುತ್ತವೆ. ಸಮಾಜದಲ್ಲಿ ಪುರುಷ ಪ್ರಾಧಾನ್ಯವು ಅಳಿದು ಸಮಾನತೆಯ ತಂಗಾಳಿ ಬೀಸುತ್ತಿದೆ ಎಂಬ ಭ್ರಮೆಯಲ್ಲಿರುವ ನಮಗೆ ಅಧಿಕಾರದ ಪ್ರಶ್ನೆಗಳು ಬಂದಾಗಲೆಲ್ಲ ವಾಸ್ತವದ ಬಿಸಿಧಗೆ ಸೋಕುತ್ತಲೇ ಇರುತ್ತದೆ. ಆದರೆ ಇದು ನಮ್ಮ ದೇಶಕ್ಕೋ ಅಥವಾ ಒಂದು ಲಿಂಗಕ್ಕೋ ಸೀಮಿತವಾದ ವಿಷಯವೆಂದು ಅನಿಸುತ್ತಿಲ್ಲ. ಪ್ರಮಾಣದಲ್ಲಿ ಹೆಚ್ಚು ಕಡಿಮೆಯಿದ್ದರೂ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಸ್ರ್ತೀಯರು ಇಡಿಯ ಪ್ರಪಂಚದಲ್ಲಿ ಪಡೆದಿರುವ ಅಧಿಕಾರಯುತ ವಾದಸ್ಥಾನವನ್ನು ಲೆಕ್ಕ ಹಾಕಿದರೆ ನಾಚಿಕೆಯಿಂದ ತಲೆತಗ್ಗಿಸುವಂತಾಗುತ್ತದೆ. ರಾಹುಲಸಾಂಕೃತ್ಯಾಯನರವೋಲ್ಗಾ-ಗಂಗಾ ದಂತಹ ಪುಸ್ತಕವನ್ನು ಓದಿದರೆ ಅಧಿಕಾರದ ಹಂಬಲಕ್ಕಾಗಿ ತಾಯಿಯನ್ನೇ ಪ್ರವಾಹಕ್ಕೆ ದೂಡುವ ನಿಶೆಯರನ್ನು ಕಾಣುತ್ತೇವೆ ಮತ್ತು ಸಂತಾನೋತ್ಪತ್ತಿಯ ಕಾರಣಕ್ಕಾಗಿಯೇ ಇಡಿಯ ಗಣದ ಮುಖ್ಯಸ್ಥಳಾಗಿರುವ ಹೆಣ್ಣನ್ನು ಅವಳ ಆ  ಶಕ್ತಿಯನ್ನೇ ನಿಧಾನವಾಗಿ ದೌರ್ಬಲ್ಯವಾಗಿಸಿ ಮನೆಯ ಗೋಡೆಗಳ ನಡುವೆ ಬಂಧಿಸಿದ ಚರಿತ್ರೆಯನ್ನು ನಾವು ಅರ್ಥಮಾಡಿಕೊಳ್ಳಬಹುದು. ಇಷ್ಟೆಲ್ಲವನ್ನು ಯಾಕೆ ಪ್ರಸ್ತಾಪಿಸಿದೆನೆಂದರೆ ಈ ಶಕ್ತಿರಾಜಕೀಯ ಎಂಬುದು ದೇಶ, ಕಾಲಗಳನ್ನು ಮೀರಿ ಸಮಾಜಕ್ಕೆ ಹಿಡಿದ ವ್ಯಾಧಿಯಾಗಿದೆ, ಎಂಬುದನ್ನು ತಿಳಿಸುವಕಾರಣಕ್ಕಾಗಿ ಅಷ್ಟೆ.           ಯಾರೇನೇ  ಹೇಳಿದರೂ ಹೆಣ್ಣು ಎಂಬ ಗೋಡೆಯೊಳಗಿನ ಜೀವ ಒಂಚೂರು ತನ್ನದೇ ಸಮಯವೆಂಬ ಬಿಡುವನ್ನು ಕಂಡುಕೊಂಡದ್ದು ವಿಜ್ಞಾನದ ಆವಿಷ್ಕಾರಗಳಿಂದಾಗಿ ಹುಟ್ಟಿಕೊಂಡ, ದೈನಂದಿನ ಕೆಲಸಗಳನ್ನು ಸುಲಭಗೊಳಿಸುವ ಅನೇಕ ಯಂತ್ರಗಳಿಂದ ಮಾತ್ರ. ಇಲ್ಲವಾದಲ್ಲಿ ಎಂಥಹ ಶಿಕ್ಷಣವೂ ಅವಳನ್ನು ಸಾಹಿತ್ಯ ರಚನೆಯೆಡೆಗೆ ಸೆಳೆಯುತ್ತಿತ್ತೆಂದು ನನಗನಿಸುತ್ತಿಲ್ಲ. ಹಾಗೆ ಸಿಕ್ಕಿದ ಬಿಡುವಿನ ವೇಳೆಯಲ್ಲಿ, ಅವಳ ಗಮ್ಯದ ಜಗತ್ತಿನ ಬಗ್ಗೆ ಬರೆಯುತ್ತಲೇ ಸ್ತ್ರೀಯರು ಇಂದು ಅದ್ಭುತವಾದ ಸಾಹಿತ್ಯದ ಕೃತಿಗಳನ್ನು ರಚಿಸಿದ್ದಾರೆ. ತಮ್ಮದೇ ಸಾಹಿತ್ಯಿಕ ಗುಂಪುಗಳನ್ನು ಮಾಡಿಕೊಂಡು ಇನ್ನಷ್ಟು ಜನರನ್ನು ತೆಕ್ಕೆಗೆ ಸೆಳೆದುಕೊಳ್ಳುತ್ತಿದ್ದಾರೆ. ಹೆಣ್ಣೊಬ್ಬಳು ಬರವಣಿಗೆಯಲ್ಲಿ ತೊಡಗಿರುವಳೆಂದು ಮನೆಯನ್ನು ಶಬ್ದಮುಕ್ತವಾಗಿಡುವ, ಅವಳ ಕೋಣೆಯಬಾಗಿಲನ್ನು ಶಬ್ದವಾಗದಂತೆ ದೂಡಿ ಕಾಲಕಾಲಕ್ಕೆ ಕಾಫಿತಿಂಡಿಗಳನ್ನು ಪೂರೈಕೆ ಮಾಡುವ, ಅವಳು ಬರೆದುದೆಲ್ಲವನ್ನು ಚಂದವಾಗಿ ಕೈಬರಹದಲ್ಲಿ ಅಥವಾ ಕಂಪ್ಯೂಟರ್ನಲ್ಲಿ ಕಾಪಿ ಮಾಡಿಕೊಡುವ ಎಷ್ಟು ಜನ ಸಂಗಾತಿಗಳಿದ್ದಾರೆಂದು ಚೂರು ಆತ್ಮ ವಿಮರ್ಶೆ ಮಾಡಿಕೊಂಡರೂ ಸಾಕು, ಮಹಿಳಾ ಸಾಹಿತ್ಯದ ಘನತೆ ತನ್ನಷ್ಟಕ್ಕೆ ವರ್ಚಸ್ಸನ್ನು ಹೆಚ್ಚಿಸಿಕೊಳ್ಳುತ್ತದೆ. ತಮ್ಮ ಎಲ್ಲ ಕರ್ತವ್ಯಗಳನ್ನು ಮುಗಿಸಿ ರಾತ್ರಿಯನ್ನು ಕರಗಿಸಿ ಸಾಹಿತ್ಯವಾಗಿಸಿರುವವರ ಸಂಖ್ಯೆಯೇ ಹೆಚ್ಚಿದೆ. ಇವೆಲ್ಲವನ್ನೂ ನಾನು ಮಹಿಳಾ ಸಾಹಿತ್ಯಕ್ಕೆ ಮೀಸಲಾತಿ ಬೇಕೆಂಬ ನೆಲೆಯಲ್ಲಿ ಪ್ರಸ್ತಾಪಿಸುತ್ತಿಲ್ಲ. ಇಷ್ಟಾಗಿಯೂ ಸಾಹಿತ್ಯ ಕ್ಷೇತ್ರದಲ್ಲಿ ತನ್ನ ಛಾಪನ್ನು ಸರಿಸಮಾನವಾಗಿ ಸ್ಥಾಪಿಸಿಕೊಳ್ಳುತ್ತಿರುವ ಮಹಿಳೆಯರು ಅಧಿಕಾರದ ವಿಷಯಕ್ಕೆ ಬಂದಾಗ ಪ್ರಸ್ಥಾಪವೇ ಆಗದಿರುವ ವಿಷಾದದ ಬಗೆಗಷ್ಟೆ ಈ ಮಾತು.          ನಿಜವಾಗಿ ನೋಡಿದರೆ ಇಂಥದೊಂದು ಪ್ರಸ್ತಾಪ ಪುರುಷ ಸಾಹಿತಿಗಳಿಂದಲೇ ಒಕ್ಕೊರಲಿನಿಂದ ಬರಬೇಕಾದುದು ಇಂದಿನ ತುರ್ತು.  ಮಹಿಳೆಯೊಬ್ಬರನ್ನು  ಕ. ಸಾ. ಪ. ದ  ಅಧ್ಯಕ್ಷಸ್ಥಾನದಲ್ಲಿ ಈ ಸಲವಾದರೂ ನಾವು ಕಾಣಬೇಕು ಎಂದು ಎಲ್ಲರಿಗೂ ಅನಿಸಲೇಬೇಕು. ಚುನಾವಣೆಯ ಹಂಗೇಕೆಂದು ಬಲಾವಣೆಗಾಗಿ ಅವಿರೋಧವಾಗಿ ಮಹಿಳಾ ಅಧ್ಯಕ್ಷರನ್ನು ಆರಿಸಬಹುದು. ಒಬ್ಬರಿಗಿಂತ ಹೆಚ್ಚು ಮಹಿಳಾ ಸ್ಪರ್ಧಿಗಳಿದ್ದರೆ ಅದೂ ಒಳಿತೆ. ಚುನಾವಣೆ ನಡೆಯಲಿ. ಮಹಿಳಾ ಸ್ಪರ್ಧಿಗಳ ನಡುವೆ ನಡೆವ ಸ್ಪರ್ಧೆಯಲ್ಲಿ ಆಯ್ಕೆಯಾದವರು ಅಧ್ಯಕ್ಷರಾಗಲಿ. ಶತಮಾನದಿಂದ ನಡೆದು ಬಂದಿರುವ ಗಂಡಾಳ್ವಿಕೆಯನ್ನು ಬಿಡುವುದರಲ್ಲಿರುವ ಸುಖವನ್ನು ನಮ್ಮ ಪುರುಷರು ಒಮ್ಮೆ ಅನುಭವಿಸಲಿ ಎಂಬುದು ನನ್ನಾಸೆ.ಅದರ ಬದಲು ಮಹಿಳೆಯರ ಆಯ್ಕೆಗೆಂದು ಮೀಸಲಾತಿಯನ್ನು ಸಾಹಿತ್ಯ ಕ್ಷೇತ್ರದಲ್ಲಿ ತರುವುದು ಬೇಡ. ಹಾಗೆ ತರಲೇಬೇಕೆಂದಾದಲ್ಲಿ ಅದು ಮೊದಲು ಪ್ರಜಾಪ್ರಭುತ್ವದ ಚುನಾವಣೆಯಲ್ಲಿ ಬರಲಿ.ಪ್ರಜ್ಞಾವಂತರೆಂದು ಜನರಿಂದ ಗುರುತಿಸಲ್ಪಡುವ ಸಾಹಿತ್ಯ ಕ್ಷೇತ್ರವೂ ಯಾಕೆ ಮೀಸಲಾತಿಯ ಹೇರಿಕೆಯಿಂದ ಸಮಾನತೆಯನ್ನು‌ ಸಾಧಿಸಬೇಕು?        ತೀರ ಮುಜುಗರದಿಂದಲೇ ನಾನಿದನ್ನು ಪ್ರಸ್ತಾಪಿಸುತ್ತಿರುವೆ. ಶಾಲಾ, ಕಾಲೇಜುಗಳ ಹಂತದಿಂದ ಹಿಡಿದು ನಡೆಯುವ ಸಭೆ, ಸಮಾರಂಭಗಳನ್ನು ಗಮನಿಸಿದರೂ ಸಾಕು. ಸಾರ್ವಜನಿಕ ಕಾರ್ಯಕ್ರವಗಳಲ್ಲಿ ಸ್ರ್ತೀ ಯರಿಗೆ ನಾವು ಕೊಡುವ ಪ್ರಾಧಾನ್ಯತೆಯ ಅರಿವಾಗುತ್ತದೆ. ಎಲ್ಲೋ ಸಭೆಯ ಮೂಲೆಯಲ್ಲೊಂದು ಕುರ್ಚಿಯಲ್ಲಿ ಮಹಿಳೆಯೊಬ್ಬರು ಕುಳಿತಿದ್ದರೆ ಹೆಚ್ಚು. ನಡುವೆ ಕುಳಿತಿದ್ದಾರೆಂದರೆ ಅದು ಅವರ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಸಫಲತೆಯ ಕಾರಣದಿಂದ ಮಾತ್ರ. ಆದರೆ ಸಾಹಿತ್ಯದಂತಹ ಸೃಜನಶೀಲ ಮತ್ತು ಭಿನ್ನ ಶಾಖೆಗಳನ್ನೊಳಗೊಂಡ ಕ್ಷೇತ್ರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವುದೂ ಅಷ್ಟು ಸಮಂಜಸವೆನಿಸದು. ಬಾಲ್ಯದಿಂದಲೂ ಪುರುಷ ಪ್ರಾಧಾನ್ಯದ ಛತ್ರದಡಿಯಲ್ಲಿಯೇ ಬೆಳೆದು ಬಂದ ನಮ್ಮ ತಲೆಮಾರಿನಲ್ಲಿ ಅಧ್ಯಕ್ಷ ಆಯ್ಕೆಯ ಬಗೆಗೂ ಆಂದೋಲನವೇ ನಡೆಯಬೇಕೇನೊ?ಆಸ್ತಿ ಮತ್ತು ಅಧಿಕಾರ ತಮ್ಮ ಹಕ್ಕು ಎಂಬುದನ್ನು ಮೈಗೂಡಿಸಿಕೊಳ್ಳದ ಈ ತಲೆಮಾರಿನ ಸ್ತ್ರೀ ಯರಿಂದ ಅದನ್ನು ನಿರೀಕ್ಷಿಸುವುದೂ ಅತಿ ಮಹತ್ವಾಕಾಂಕ್ಷೆಯೆನಿಸುತ್ತದೆ.   ಆದರೆ ಖಂಡಿತವಾಗಿಯೂ ಕೆಲವು ಪುರುಷರಾದರೂ ಈ  ಆಂದೋಲನಕ್ಕೆ ಜೊತೆಯಾಗುವರೆಂಬ ನಿರೀಕ್ಷೆಯೂ ಬೆಳಕಿನ ಕೋಲಿನಂತೆ ಮಿಂಚುತ್ತದೆ.       ಇಂದಿನ ಯುವ ತಲೆಮಾರು ನಿಜಕ್ಕೂ ಲಿಂಗಸೂಕ್ಷ್ಮತೆಯನ್ನು ಹೊಂದಿದೆಯೆಂದು ಪದೇ ಪದೇ ಸಾಬೀತುಗೊಳ್ಳುತ್ತಿದೆ. ತಮ್ಮ ಸಹ ಬರಹಗಾರರನ್ನು ಹೆಣ್ಣು ಗಂಡುಗಳೆಂಬ ಬೇಧವಿಲ್ಲದೇ ಪರಿಗಣಿಸುವ ಮತ್ತು ಅಧಿಕಾರದಿಂದ ಹಿಡಿದು ಎಲ್ಲವನ್ನೂ ಸಮಾನವಾಗಿ ಪ್ರೀತಿಯಿಂದ ಹಂಚಿಕೊಳ್ಳುವ ವಿಶಾಲ ಮನೋಭಾವವನ್ನು ಇಂದಿನ ಯುವ ಸಾಹಿತಿಗಳು ಹೊಂದಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಹೀಗೆಯೇ ಮುಂದುವರೆದಲ್ಲಿ ಕೆಲವೇ ವರ್ಷಗಳಲ್ಲಿ ಸಾಹಿತ್ಯದ ಎಲ್ಲ ಶಕ್ತಿ ಕೇಂದ್ರಗಳಲ್ಲಿ ಲಿಂಗತ್ವದ ಗೆರೆ ಅಳಿಸಿ ಹೋಗಲಿದೆ. ಅದು ಸಂಭವಿಸುವ ಮೊದಲೇ ನಮ್ಮ ತಲೆಮಾರು ಎಚ್ಚೆತ್ತುಕೊಂಡರೆ ಮುಂದಿನ ಪೀಳಿಗೆಗೆ ನಾವು ಮಾರ್ಗದರ್ಶಕರೆನಿಸಿಕೊಳ್ಳುತ್ತೇವೆ. ಏನೇ ಬರೆದರೂ ಅಧಿಕಾರವೆಂಬುವುದು ಅಮಲಾಗಿರುವಾಗ ಅಮಲಿನಲ್ಲಿರುವವರನ್ನು ಎಚ್ಚರಿಸುವುದು ಕಠಿಣ ಕೆಲಸವೆ.          ಮಹಿಳಾ ಶಕ್ತಿಯೆಂಬುದು ಇಂದು ಕಟ್ಟೆಯೊಡೆದ ಪ್ರವಾಹ. ಎಂತಹ ತಡೆಯೇ ಬಂದರೂ ಅದರ ಮುನ್ನುಗ್ಗುವಿಕೆಯನ್ನು ಪ್ರತಿಬಂಧಿಸಲಾಗದು. ಅಧಿಕಾರದ ಚುಕ್ಕಾಣಿ ಹಿಡಿಯಲು ನೀವು ಹೋರಾಡುತ್ತಲೇ ಇರಿ. ನಾವು ಸಾಹಿತ್ಯದ ಹಸಿರುಕ್ಕಿಸುತ್ತಲೇ ಸಾಗುತ್ತೇವೆ. ನಮ್ಮ ತೆಕ್ಕೆಯಲ್ಲಿ ಮುಂದಿನ ಜನಾಂಗವನ್ನು ಕಾಪಿಟ್ಟುಕೊಳ್ಳುತ್ತಲೇ ಅರಿವಿನ ಹಣತೆಯನ್ನು ಬೆಳಗುತ್ತೇವೆ. ಕೈಯಲ್ಲಿ ಬೀಜ ಹಿಡಿದವರಷ್ಟೇ ಕಾಡಿನ ಕನಸು ಕಾಣಬಲ್ಲರು. ಇಂದು ನೀವು ಕೇಳಿದ ಪ್ರಶ್ನೆ ಸ್ವಲ್ಪವೇ ವರ್ಷಗಳಲ್ಲಿ ಉತ್ತರ ಪಡೆದುಕೊಂಡೀತು. ಚುನಾವಣೆಯ ಮೂಲಕವೇ ಅಧ್ಯಕ್ಷ ಸ್ಥಾನ ಮಹಿಳೆಯರಿಗೊಲಿಯಲಿ. *****************************************                                                                     ***********************                                                                     –

ಕಸಾಪಗೆ ಮಹಿಳಾ ಅಧ್ಯಕ್ಷರು Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಡಾ.ಪಾರ್ವತಿ ಜಿ.ಐತಾಳ್ ಅವರು ಪ್ರತಿ ಮಂಗಳವಾರ ಮತ್ತು ಶುಕ್ರವಾರ ಈ ಅಂಕಣದಲ್ಲಿ ಅನ್ಯವಾಷೆಗಳಿಂದ ಕನ್ನಡಕ್ಕೆಅನುವಾದಗೊಂಡ ಕೃತಿಗಳ ಓದಿಗೆ ಪೂರಕವಾಗಿ ಅವುಗಳ ಪರಿಚಯ ಮಾಡಿಕೊಡಲಿದ್ದಾರೆ ಕೊಸಿಮೊ ಕೊಸಿಮೊ ( ಕಾದಂಬರಿ)ಮೂಲ : ಇಟಾಲೋ ಕಾಲ್ವಿನೊಕನ್ನಡಕ್ಕೆ : ಕೆ.ಪಿ.ಸುರೇಶಪ್ರ : ಅಭಿನವಪ್ರಕಟಣೆಯ ವರ್ಷ : ೨೦೦೮ಬೆಲೆ : ರೂ.೧೦೦ ಪುಟಗಳು : ೨೧೬ ಜಗತ್ಪ್ರಸಿದ್ದ  ಲೇಖಕ ಇಟಾಲೋ ಕಾಲ್ವಿನೋ ಅವರ  ಕಾದಂಬರಿಯ ಇಂಗ್ಲಿಷ್ ಅನುವಾದ ‘ದಿ ಬ್ಯಾರನ್ ಇನ್ ದ ಟ್ರೀಸ್’ ಇದನ್ನು ಸುರೇಶ್ ಅವರು ‘ಕೊಸಿಮೋ’ಎಂಬ ಅದರ ನಾಯಕನ ಹೆಸರಿನ ಶೀರ್ಷಿಕೆಯಿಂದ ಅನುವಾದಿಸಿದ್ದಾರೆ. ಬಹಳ ವಿಶಿಷ್ಟವಾದ ಒಂದು ಕಥಾವಸ್ತುವನ್ನು ಹೊಂದಿದ ಕಾದಂಬರಿಯಿದು.  ಮಹಾ ಛಲವಾದಿ ಕೊಸಿಮೊ ತನ್ನ ಹನ್ನೆರಡನೆಯ ವಯಸ್ಸಿನಲ್ಲೇ ಯಾವುದೋ ಕಾರಣಕ್ಕೆ ತಂದೆಯ ಮೇಲೆ ಮುನಿಸಿಕೊಂಡು ಮರವೇರಿ ಕುಳಿತು, ಇನ್ನು ಮುಂದೆ ಎಂದಿಗೂ ನೆಲದ ಮೇಲೆ ಕಾಲಿಡುವುದಿಲ್ಲವೆಂದು ಪ್ರತಿಜ್ಞೆ ಮಾಡಿದವನು ಕೊನೆಯ ತನಕವೂ ತನ್ನ ಮಾತನ್ನು ಉಳಿಸಿಕೊಳ್ಳುತ್ತಾನೆ.  ಮನುಷ್ಯನೊಬ್ಬ ನೆಲದ ವ್ಯವಹಾರಗಳನ್ನು ಪೂರ್ತಿಯಾಗಿ ಬಿಟ್ಟು  ಮರದ ಮೇಲೆಯೇ, ನಿಸರ್ಗದ ಒಂದು ಅವಿಭಾಜ್ಯ ಅಂಗವಾಗಿ ಹೇಗೆ ಯಶಸ್ವಿಯಾಗಿ ಬದುಕಲು ಸಾಧ್ಯವೆಂಬುದನ್ನು ಈ ಕಥೆ ತೋರಿಸಿ ಕೊಡುತ್ತದೆ. ಕೊಸಿಮೊ ಹುಟ್ಟಿದ್ದು ಪ್ರತಿಷ್ಠಿತ ಜಮೀನ್ದಾರಿ ಕುಟುಂಬದಲ್ಲಿ. ಅಧಿಕಾರ-ಪ್ರತಿಷ್ಠೆಗಳೇ ಮುಖ್ಯವೆಂದು ತಿಳಿದುಕೊಂಡ ತಂದೆಯ ಅಹಂಕಾರವನ್ನು ಮೆಟ್ಟಿ ಮೇಲೇರಿ ನಿಂತು, ಬಡವರ ಬಂಧುವಾಗಿ, ಅಸಹಾಯಕರಿಗೆ ಸಹಾಯ ಮಾಡುತ್ತ ಆಕಾಶದೆತ್ತರಕ್ಕೆ ಬೆಳೆಯುವ ಕೊಸಿಮೋನ ಬದುಕಿನ ಕಥೆ ಬಹಳ ರೋಮಾಂಚಕ. ಮರದ ಮೇಲಿನ ಮನುಷ್ಯನೆಂದು ಇಡಿಯ ಭೂಖಂಡದಲ್ಲಿ ಪ್ರಸಿದ್ಧಿ ಪಡೆಯುವ ಕೊಸಿಮೊ ಎಂದರೆ ಆತನ ತಮ್ಮ ( ಈ ಕಥೆಯ ನಿರೂಪಕ) ನಿಗೂ ಎಲ್ಲಿಲ್ಲದ ಹೆಮ್ಮೆ. ತಮ್ಮನ ಸಹಾಯದಿಂದ ಮರದ ಮೇಲಿನ ಬದುಕಿಗೆ ಎಲ್ಲ ಸೌಕರ್ಯಗಳನ್ನು ಮಾಡಿಕೊಳ್ಳುವ ಕೊಸಿಮೊ ಮರದಿಂದ ಮರಕ್ಕೆ ಕೋತಿಯಂತೆ ಹಾರುತ್ತ, ನೇತಾಡುತ್ತ ಸರಾಗವಾಗಿ  ಓಡಾಡುತ್ತ, ದೂರಗಳನ್ನು ಕ್ರಮಿಸಲು ಕಲಿಯುವುದೇ ಒಂದು ಸೋಜಿಗ. ನೆಲವನ್ನು ಮುಟ್ಟಲು ಬಂದೂಕು-ಕಠಾರಿಗಳನ್ನು ಹಿಡಿದು ಯುದ್ಧವನ್ನೂ ಮಾಡಬಲ್ಲ, ಎದುರಾಳಿಗಳನ್ನು ಕಾಳಗದಲ್ಲಿ ಸೋಲಿಸ ಬಲ್ಲ ಆತನ ಧೈರ್ಯ-ಸಾಹಸ-ಸಾಮರ್ಥ್ಯಗಳು ಬೆರಗು ಹುಟ್ಟಿಸುತ್ತವೆ.  ಆತನಿಂದ ಆಕರ್ಷಿತರಾಗುವ ಅನೇಕ ಹೆಣ್ಣುಮಕ್ಕಳೊಂದಿಗೆ ಪ್ರಣಯದ ಅನುಭವಗಳನ್ನೂ ಕೊಸಿಮೊ ಪಡೆಯುತ್ತಾನೆ. ಸಂಸಾರ ಸುಖವೊಂದನ್ನು ಬಿಟ್ಟರೆ  ನೆಲದ ಮೇಲಿನ ಮನುಷ್ಯರಷ್ಟೇ ಸುಖ ಪಡೆದು, ಮಾತ್ರವಲ್ಲ, ಸಾಮಾನ್ಯ ಮನುಷ್ಯರಿಗಿಂತ ಹೆಚ್ಚಿನ ಸಾಧನೆಗಳನ್ನು ಅವನು ಮಾಡುತ್ತಾನೆ. ಒಂದಾದ ನಂತರ ಇನ್ನೊಂದರಂತೆ ವಿವಿಧ ವಿಷಯಗಳಿಗೆ ಸಂಬಂಧ ಪಟ್ಟ ಪುಸ್ತಕಗಳನ್ನೂಓದುವ ಕೊಸಿಮೊ ಮಹಾಜ್ಞಾನಿಯೂ ಆಗುತ್ತಾನೆ. ತನ್ನ ಓದಿನ ಹುಚ್ಚನ್ನು ಕುಪ್ರಸಿದ್ಧನಾದ ಒಬ್ಬ ದರೋಡೆಕೋರನಿಗೂ ಅಂಟಿಸಿ ಅವನನ್ನೊಬ್ಬ ಒಳ್ಳೆಯ ವ್ಯಕ್ತಿಯನ್ನಾಗಿ ಪರಿವರ್ತಿಸುತ್ತಾನೆ.  ಆದರ್ಶ ರಾಜ್ಯವೆನಿಸಿದ ಯುಟೋಪಿಯಾವನ್ನು ಪುನರ್ನಿರ್ಮಿಸುವ ಪ್ರಯತ್ನವನ್ನು ಇಟಾಲೋ ಕಾಲ್ವಿನೋ ಇಲ್ಲಿ ಮಾಡುತ್ತಾರೆ. ಆದ್ಯಕಾಲದ ಇಂಗ್ಲಿಷ್ ಕಾದಂಬರಿಕಾರರಾದ ರಿಚರ್ಡ್ಸನ್ ಮತ್ತು ಫೀಲ್ಡಿಂಗರ ನೈತಿಕತೆ ಮೇಲೆ ಒತ್ತುನೀಡುವ ಕಾದಂಬರಿಗಳ ನಾಜೂಕಾದ ಅಣಕವೂ ಇಲ್ಲಿದೆ. ಒಟ್ಟಿನಲ್ಲಿ ಕೊಸಿಮೊನ ಕಥೆ  ಒಂದು ರೀತಿಯ ಫ್ಯಾಂಟಸಿ ಶೈಲಿಯಲ್ಲಿ  ಕುತೂಹಲದಿಂದ ಓದಿಸಿಕೊಂಡು ಹೋಗುತ್ತದೆ.  ಕೆ.ಪಿ.ಸುರೇಶ ಅವರು ಕಾದಂಬರಿಯನ್ನು ಬಹಳ ಸುಂದರವಾಗಿ ಅನುವಾದಿಸಿದ್ದಾರೆ.  ಅವರ ಭಾಷಾ ಶೈಲಿ, ವಾಕ್ಯ ಸರಣಿ, ಪದಬಳಕೆಗಳಲ್ಲಿ ಕನ್ನಡದ ಸಹಜತೆ ಬಹಳ ಆಪ್ಯಾಯಮಾನವಾಗಿ ಮೂಡಿ ಬಂದಿದೆ. ********************** ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

You cannot copy content of this page

Scroll to Top