ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಪ್ರೇಕ್ಷಕ ಪರಂಪರೆಯ ಅನ್ನದಾತರು

ಲೇಖನ ಪ್ರೇಕ್ಷಕ ಪರಂಪರೆಯ ಅನ್ನದಾತರು ಮಲ್ಲಿಕಾರ್ಜುನ ಕಡಕೋಳ ಯಶಸ್ವಿ ನಾಟಕವೊಂದರ ಕುರಿತು ಮಾತಾಡುವಾಗ ಎಂಥವರಿಗೂ ಆಧುನಿಕ ರಂಗಭೂಮಿ ಸಂದರ್ಭದಲ್ಲಿ ನಿರ್ದೇಶಕ ಪರಂಪರೆಯತ್ತ ಆದ್ಯಗಮನ. ಹಾಗೇನೆ ವೃತ್ತಿರಂಗಭೂಮಿ ಸಂದರ್ಭದಲ್ಲಿ ನಟನ ಪರಂಪರೆಯದು ಧುತ್ತನೆ ನೆರವಿಗೆ ನಿಲ್ಲುವ ನಿಲುವು. ನಮ್ಮ ಪ್ರೊಸಿನಿಯಮ್ ಥಿಯೇಟರ್ ಪ್ರದರ್ಶನಗಳು ಪ್ರೇಕ್ಷಕರೆಂಬ ಐಕಾನ್ ಗಳ ಮೂಲಕವೇ ಸಾಂಸ್ಕೃತಿಕ ಮೌಲ್ಯ ಗಳಿಸಿವೆಯೆಂಬ ದ್ಯಾಸವೇ ಇರಲ್ಲ. ಅಷ್ಟು ಮಾತ್ರವಲ್ಲದೇ ರಂಗಸಂಸ್ಕೃತಿಯ ಅಭಿವೃದ್ಧಿ ಹಾಗೂ ವಿಕಾಸದ ಸಾಧ್ಯತೆಯ ಕ್ಷಿತಿಜ ವಿಸ್ತಾರಗೊಳ್ಳುವುದೇ ಪ್ರೇಕ್ಷಕ ಪ್ರಭುಗಳಿಂದ. ಇಂತಹ ಮಹತ್ತರ ಸಂಗತಿಗಳನ್ನೇ ನೇಪಥ್ಯಕ್ಕೆ ಜರುಗಿಸುವ ಜಾಣ ಕೆಲಸ ಕೆಲವು ರಂಗಪಂಡಿತರು ಎಸಗುತ್ತಾರೆ. ಅಷ್ಟೇಯಾಕೆ ಕೆಲವೊಮ್ಮೆ ಹ್ಯಾವಕ್ಕೆ ಬಿದ್ದಂತೆ ನಿರ್ದೇಶಕ ಹಾಗೂ ನಟನಾ ಪರಂಪರೆ ಕುರಿತೇ ಹೆಚ್ಚು ಹೆಚ್ಚು ಚರ್ಚೆಯ ಒಣಪಾಂಡಿತ್ಯ ಮೆರೆಯುತ್ತಾರೆ. ಸಿನೆಮಾ, ನಾಟಕ, ಭಾಷಣ, ಪುಸ್ತಕ ಇತರೆ ಎಲ್ಲ ಸಾಂಸ್ಕೃತಿಕ ಜ್ಞಾನಶಿಸ್ತು ಪ್ರದರ್ಶನಗಳ ಕುರಿತು ನಿಕಷದ ಚಿಂತನೆಗಳು ಅಭಿವ್ಯಕ್ತಿಯ ಸ್ವರೂಪ ಪಡೆದುಕೊಳ್ಳುವಾಗ ಪ್ರೇಕ್ಷಕ, ಕೇಳುಗ, ಓದುಗ ಸಹೃದಯತೆಯ ಮಹತ್ವದ ಸ್ಥಾನವನ್ನು ಅಲಂಕರಿಸುತ್ತಾನೆಂಬುದು ಮರೆಯಲಾಗದು. ನಮ್ಮ ಪರಂಪರಾಗತ ಸಂಕಥನ ಪಾಠ್ಯಗಳಲ್ಲಿ ಇದೆಲ್ಲ ಉಲ್ಲೇಖನೀಯ ವಿಷಯ . ಅದರಲ್ಲೂ ವಿಶೇಷವಾಗಿ ವೃತ್ತಿರಂಗಭೂಮಿಯಲ್ಲಿ ಹಲವು ಸಾಂಸ್ಕೃತಿಕ ಪರಂಪರೆಗಳು ಶಿಖರಪ್ರಾಯದ ಉಲ್ಲೇಖಿತ ಮಟ್ಟದಲ್ಲಿವೆ. ಅಲ್ಲಿ ಪ್ರಮುಖವಾಗಿ ನಟನಾ ಪರಂಪರೆ, ರಂಗ ಸಂಗೀತ ಪರಂಪರೆ, ರಂಗಸಜ್ಜಿಕೆಗಳ ಪರಂಪರೆಗಳು ಆಕರ ಸ್ಥಾನ ಪಡಕೊಂಡಿವೆ. ಅಷ್ಟೇ ಮಹತ್ವದ ಮತ್ತೊಂದು ಪರಂಪರೆ ಅಲ್ಲಿದೆ. ಅದುವೇ ಸಹೃದಯ ಪ್ರೇಕ್ಷಕ ಪರಂಪರೆ. ಎಷ್ಟೋ ಬಾರಿ ವೃತ್ತಿರಂಗಭೂಮಿಯ ನಾಟಕಗಳಲ್ಲಿ ಪ್ರೇಕ್ಷಕ ಅದೆಂತಹ ಮಹತ್ವ ಪಡೆದುಕೊಳ್ಳುತ್ತಾನೆಂದರೆ, ಕಲಾವಿದರು ನಾಟಕದ ನಡುವೆಯೇ ಪ್ರೇಕ್ಷಕರೊಂದಿಗೆ ಸಂಭಾಷಣೆಗೆ ಇಳಿಯುವ ಸನ್ನಿವೇಶಗಳು ಸ್ವಾಭಾವಿಕವಾಗಿ ಸೃಷ್ಟಿಯಾಗುತ್ತವೆ. ವೃತ್ತಿ ರಂಗದ ನಟನಟಿಯರು ಯಾವುದೇ ಮಡಿವಂತಿಕೆ ಇಲ್ಲದೇ ಕಾಕಾ, ಅಣ್ಣಾ, ಮಾಮಾ ಅಂತ ಪ್ರೇಕ್ಷಕರೊಂದಿಗೆ ಸಂಬೋಧನೆಗೆ ತೊಡಗುವ ಸಂದರ್ಭೋಚಿತ ಸನ್ನಿವೇಶಗಳು ನಗೆಗಡಲ ಜಳಕ ಮಾಡಿಸುತ್ತವೆ. ಇನ್ನು ಕಲಾವಿದರಿಂದ ಸುಪರ್ ಹಿಟ್ ಡೈಲಾಗ್ ಕೇಳಿದೊಡನೆ, ಅಂತಹದ್ದೇ ಮನಮೆಚ್ಚುಗೆಯ ರಂಗಸಂಗೀತ ಕೇಳಿದಾಗ ಸಂತುಷ್ಟರಾದ ಪ್ರೇಕ್ಷಕರು ಸಿಳ್ಳು, ಚಪ್ಪಾಳೆಗಳ ಸುರಿಮಳೆಗೈಯ್ಯುತ್ತಾರೆ. ಅದು ಅಷ್ಟಕ್ಕೆ ತಮಣಿಯಾಗದೇ ಪ್ರೇಕ್ಷಕಾಂಗಣದ ಸಂತಸ ಸಂಭ್ರಮದ ಎಲ್ಲೆ ಮೀರಿ ಒನ್ಸ್ ಮೋರ್ ಎಂದು ಭಾವ ಪರವಶರಾಗಿ ಜೋರಾಗಿ ಕೂಗುತ್ತಾರೆ. ಅವರ ಮೆಚ್ಚುಗೆಯ ಕೂಗಿಗೆ ಗೌರವತೋರಿ ಮತ್ತದೇ ಹಾಡು, ಡೈಲಾಗ್ ಮರುಕಳಿಸುತ್ತವೆ. ಹೀಗೆ ಕಲಾವಿದರು ಮತ್ತು ಪ್ರೇಕ್ಷಕರ ನಡುವೆ ಅಪರೂಪದ ರಂಗಸಂಸ್ಕೃತಿಯೊಂದರ ಸಂಪ್ರೀತಿಯ ಸಂವಾದ, ಸಂವಹನವೇ ಏರ್ಪಡುತ್ತದೆ. ವರನಟ ಡಾ. ರಾಜಕುಮಾರ ಅವರು ವೃತ್ತಿರಂಗಭೂಮಿಯ ರಂಗಮೌಲ್ಯ ಮೆರೆದ ಪ್ರಾತಃಸ್ಮರಣೀಯರು. ಅಂತೆಯೇ ಅವರು ಪ್ರೇಕ್ಷಕ ಪ್ರಭುಗಳಿಗೆ ಅಭಿಮಾನಿ ದೇವರುಗಳೆಂತಲೇ ಕರೆದು ಗೌರವ ತೋರುತ್ತಿದ್ದರು. ಮಾಸ್ಟರ್ ಹಿರಣ್ಣಯ್ಯನವರು ಯಾವತ್ತೂ ಪ್ರೇಕ್ಷಕರನ್ನು ಅನ್ನದಾತರೆಂದೇ ಬಾಯ್ತುಂಬಾ ಅಂತಃಕರಣ ತುಂಬಿ ಪ್ರೀತ್ಯಾದರ ತೋರುತ್ತಿದ್ದರು. ಏಣಗಿ ಬಾಳಪ್ಪ ಹಾಗೂ ಇನ್ನು ಕೆಲವು ಕಂಪನಿಗಳಲ್ಲಿ ಪ್ರೇಕ್ಷಕರಿಗೆ ಶರಣು ಹೇಳುವ ಸನ್ನಿವೇಶಗಳು ರಂಗಪ್ರಯೋಗದಂತೆ ಮಹತ್ವದ ಸ್ಥಾನ ಗಳಿಸಿದ್ದವು. ಕ್ಯಾಂಪ್ ಮಾಡಿದ ಊರುಗಳಲ್ಲಿ ಆಯ್ದ ಪ್ರೇಕ್ಷಕರಿಗೆ ಗೌರವಪಾಸ್ ನೀಡಿ ನಾಟಕಕ್ಕೆ ಆಮಂತ್ರಿಸುವ ಪದ್ಧತಿಯೇ ಇತ್ತು. ವೃತ್ತಿ ರಂಗಭೂಮಿಯ ಆರಂಭದ ಅಂದಿನಿಂದ ಇಂದಿನವರೆಗೂ ಒಂದೂವರೆ ಶತಮಾನ ಕಳೆದರೂ ಪ್ರೇಕ್ಷಕ ಮಹಾಶಯರ ಮೇಲಿನ ಗೌರವ, ಪ್ರೀತಿ, ವಿಶ್ವಾಸ ದಿನೇ ದಿನೇ ಹೆಚ್ಚುತ್ತಲೇ ಬಂದಿದೆ. ಅದೊಂದು ಅಮೂಲ್ಯ ಪರಂಪರೆ ಮಾತ್ರವಾಗಿ ಬೆಳೆಯದೇ ರಂಗಸಂಸ್ಕೃತಿಯ ಅನನ್ಯತೆಯಾಗಿ ಬೆಳೆಯುತ್ತಲೇ ಮುನ್ನಡೆ ಸಾಧಿಸಿದೆ. ಇಂತಹ ಸಹೃದಯ ಪರಂಪರೆ ಆಧುನಿಕತೆಯ ಬೇರೊಂದು ರಂಗಪ್ರಕಾರಗಳಲ್ಲಿ ಹುಡುಕಿದರೂ ನಮಗೆ ಕಾಣಸಿಗುವುದಿಲ್ಲ. ಪ್ರಾರಂಭಿಸಲ್ಪಟ್ಟ ನಾಟಕ ಇನ್ನೊಂದು ಮಹತ್ವದ ಸನ್ನಿವೇಶದೊಂದಿಗೆ ಮಂಗಲ ಹಾಡುತ್ತದೆ. ಯಾವತ್ತೂ ನಮ್ಮನ್ನು ಪ್ರೋತ್ಸಾಹಿಸಿ ನಮಗೆ ಅನ್ನ ನೀಡುತ್ತಿರುವ ತಂದೆ ತಾಯಿ ಸ್ವರೂಪಿ ಅನ್ನದಾತ ಪ್ರೇಕ್ಷಕ ಮಹಾಪ್ರಭುಗಳ ಅಡಿದಾವರೆಗಳಿಗೆ ಪೊಡಮೊಟ್ಟು…. ಎಂಬ ಸವಿನಯ ಪ್ರಾರ್ಥನೆಯ ಮಾತುಗಳು ಲೆಕ್ಚರ್ ಸೀನ್ ಎಂಬ ನುಡಿಗಟ್ಟಿನೊಂದಿಗೆ ಇವತ್ತಿಗೂ ಎಲ್ಲಾ ನಾಟಕ ಕಂಪನಿಗಳು ಪ್ರೇಕ್ಷಕ ಪರಂಪರೆಗೆ ಗೌರವಿಸುವ ಪರಿಪಾಠಗಳನ್ನು ತಪ್ಪದೇ ಪರಿಪಾಲಿಸುತ್ತಾ ಬಂದಿವೆ. ಇದು ರಂಗಸಂಸ್ಕೃತಿಯ ಮಹೋನ್ನತ ಪ್ರೇಕ್ಷಕ ಪರಂಪರೆಗೆ ಸಲ್ಲುವ ಗೌರವ **************************

ಪ್ರೇಕ್ಷಕ ಪರಂಪರೆಯ ಅನ್ನದಾತರು Read Post »

ಕಾವ್ಯಯಾನ

ಕಾಪಿಟ್ಟು ಕಾಯುತ್ತಾಳೆ

ಕವಿತೆ ಕಾಪಿಟ್ಟು ಕಾಯುತ್ತಾಳೆ ಶ್ರೀವಲ್ಲಿ ಶೇಷಾದ್ರಿ ಋತು ಋತುವಿಗೊಂದೊಂದು ಹೊಸತುಹೆಚ್ಚುಗಾರಿಕೆಯ ಬಿಚ್ಚಿಡುತ್ತಾಳೆ,ಅಚ್ಚರಿ ಹುಟ್ಟಿಸಿಬೆಚ್ಚಿಸುವ ಈಹುಚ್ಚಿಪೆಚ್ಚಾಗಿಸುತ್ತಾಳೆ ಹುಚ್ಚುಗಳ ಹೆಚ್ಚಿಸಿಮನದಿಚ್ಚೆಗಳ ಅಚ್ಚು ಹಾಕಿಸಿಟ್ಟುರಚ್ಚೆ ಹಿಡಿದು ಅಚ್ಚು ಮೆಚ್ಚಾಗಿಕೊಚ್ಚಿ ಹೋಗದ ಹಾಗೆ ಬಚ್ಚಿಟ್ಟುಕಾಪಿಟ್ಟು ಕಾಯುತ್ತಾಳೆ ಬೆಚ್ಚಗೆ ಕಳಚಿಟ್ಟ ಪೊರೆ ಮತ್ತೆ ಹಸಿರು ಕೊನರಿಹಸಿ ಕರಗ ಮಣ ಭಾರ ಹೊತ್ತುಚೀರಿ ಹಾರಿ ಮೇಲೆರಗೊ ಹನಿಯರಭಸ ಭರಿಸಿ ಝಾಡಿಸಿ ತೂರಿಎಲ್ಲೆ ಇರದೆಡೆ ಹರಿದು ಬರಿಯರಾಡಿಯನ್ನಪ್ಪಿ ಒಪ್ಪಿ ಮುತ್ತಿಕ್ಕಿ ದಿನ ರಾತ್ರಿಯಾಟಕ್ಕೆ ಅದರಿ ಬೆದರಿಗರಿ ಕೆದರಿ ಮತ್ತೊಮ್ಮೆ ಹೂವಾಗುತ್ತಾಳೆ ಬಟ್ಟ ಬಯಲಿನಲಿ ದೃಷ್ಟಿ ತಾಗುವ ಹಾಗೆಪರಿಪರಿಯ ನಿಲುವಾಭರಣ ಪೇರಿಸಿಹೆಜ್ಜೆಗೊಂದು ಗೆಜ್ಜೆ ಎದೆ ಛಲ್ಲೆನ್ನಿಸಿಬೆಳಕು ಬೆಳದಿಂಗಳ ಕಲಕಿ ಕುಲುಕಿತಿಂಗಳ ತಿಳಿಗೊಳವ ಮುಳುಗಿ ತೇಲಿಸಿಅಳುವ ಕಡಲಿಗೆ ನಗೆ ದೋಣಿ ಹಾಯಿಸಿಏನೂ ಅರಿಯದೆ ಮಂಜು ಮುಸುಕಿನಲಿಎಲ್ಲೊ ದಿಟ್ಟೆ ನೆಟ್ಟು ನಿಲ್ಲುವ ಈ ಹುಚ್ಚಿ. *******************************

ಕಾಪಿಟ್ಟು ಕಾಯುತ್ತಾಳೆ Read Post »

ಇತರೆ

ಕೊಂಕಣಿ ಕವಿ ಪರಿಚಯ

ಕೊಂಕಣಿ ಕವಿ ಪರಿಚಯ ಜೊಸೆಫ್ ಸಿದ್ದಕಟ್ಟೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಗ್ರಾಮದ ಶ್ರೀ ಜೊಸೆಫ್ ಸಿದ್ದಕಟ್ಟೆಯವರು ಮಂಗಳೂರಿನ ಕಾರ್ಮೆಲ್ ಚರ್ಚಿನ ಫಾದರ್ ಆಗಿ ಸೇವೆ ಸಲ್ಲಿಸುತಿದ್ದಾರೆ. ಬಹಳ ಚಿಕ್ಕ ವಯಸ್ಸಿನಿಂದಲೇ ಬರವಣಿಗೆಯಲ್ಲಿ ತನ್ನನ್ನು ತೊಡಗಿಸಿಕೊಂಡು, ಕೊಂಕಣಿಯ ಯುವ ಕವಿ ಜೊಸಿ ಸಿದ್ದಕಟ್ಟೆ ಎಂಬ ಕಾವ್ಯನಾಮದಿಂದ ಅತ್ಯಂತ ಪ್ರಭಾವಶಾಲಿಯಾಗಿ ಹೊರಹೊಮ್ಮಿದ್ದಾರೆ. ಕಿಟಾಳ್ ಪತ್ರಿಕೆಯ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ “ಕಿಟಾಳ್ ಯುವ ಪರಸ್ಕಾರ್” 2011 ರಲ್ಲಿ, ಇನ್ನೊಂದು ಪ್ರತಿಷ್ಠಿತ ಪ್ರಶಸ್ತಿಯಾದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ್, 2013 ರಲ್ಲಿ ಜೊಸಿ ಸಿದ್ದಕಟ್ಟೆಯವರಿಗೆ ಲಭಿಸಿದೆ. ಸಾಹಿತ್ಯ ರಚನೆಗಳು: “ಪಾವ್ಸಾದೋಣು” ಕವಿತಾ ಸಂಕಲನ (2008) “ಮೋರಾನ್ ಸಾಂಡ್ಲೆಲಿ ಪಾಕಾಂ” ಕವಿತಾ ಸಂಕಲನ (2011) “ಉಜ್ಯಾ ತುಜ಼ೆ ವೇಂಗೇಂತ್” ಕವಿತಾ ಸಂಕಲನ (2015) ಯೂಟರ್ನ್ ( ಅಂಕಣ ಬರಹಗಳ ಸಂಕಲನ) ಕಾಜುಲೊ ( ನ್ಯಾನೋ ಕತೆಗಳ ಸಂಕಲನ) ಕಲ್ವಾರಿರ್ ರಾಜಿ ಸಂಧಾನ. ಇವಿಷ್ಟೂ ಪುಸ್ತಕಗಳು ಪ್ರಕಟಗೊಂಡು ಓದುಗ ವಲಯದೊಳಗೆ ಪ್ರಸಿದ್ಧಿಯನ್ನು, ಅಪಾರ ಮನ್ನಣೆಯನ್ನು ಪಡೆದಿವೆ. ನಾಟಕ ರಚನೆ , ನಿರ್ದೇಶನಗಳಲ್ಲೂ ತನ್ನನ್ನು ತೊಡಗಿಸಿಕೊಂಡಿರುವ ಫಾ| ಜೊಸಿ ಸಿದ್ದಕಟ್ಟೆಯವರು ಸಾಹಿತ್ಯದ ಎಲ್ಲಾ ಪ್ರಾಕಾರಗಳಲ್ಲೂ  ಕೈಯಾಡಿಸಿ ಪರಿಣಿತಿಯನ್ನು ಪಡೆದಿದ್ದಾರೆ. ಉದಾ: ಹೈಕು, ಗಝಲ್, ಇತ್ಯಾದಿ. ಜೊಸಿ ಸಿದ್ದಕಟ್ಟೆಯವರ ಎರಡು ಕವಿತೆಗಳು ನಿಮ್ಮ ಓದಿಗಾಗಿ: ಮೊರಾನ್ ಸಾಂಡ್ಲಲಿಂ ಪಾಕಾಂ – ಕುಮೆರಿಂತ್ ಮೊರಾನ್ ಸಾಂಡ್ಲಲಿಂ ಪಾಕಾಂ ಆರಾವ್ನ್ ಆರಾವ್ನ್ ಹಾಡ್ಲಿಂ ಥೊಡಿಂ ಧಾಕ್ಟಿಂ, ಕಾಂಯ್ ಥೊಡಿಂ ವ್ಹಡ್ಲಿಂ ಆನಿ ತಾಣಿಂಚ್ ಆಮ್ಚಿಂ ಮನಾಂ ಫೊಡ್ಲಿಂ ಬಬ್ಲಾನ್ ಏಕ್ ಪಾಕ್ ಚೊರುನ್ ವೆಲೆಂ ಮಿತ್ರಾಂಕ್ ದಾಕವ್ನ್ ಹರ್ಧೆಂ ಫುಲಂವ್ಕ್ ಬಯ್ಯಾನ್ ವಿಚಾರಿನಾಸ್ತಾಂ ಲಿಪಯ್ಲೆಂ ಏಕ್ ಬುಕಾಪಾನಾಂ ಇಡ್ಯಾಂತ್ ಪಿಲಾಂ ಕಾಡುಂಕ್ ದಾಟ್ಟುಕೀ ಏಕ್ ಜಾಯ್ ಆಸ್ಲೆಂ ಚಾಂಪ್ಯಾವನಾಂತ್ ಆಪೊವ್ನ್ ಗುಪ್ತಿಂ ‘ತಾಕಾ’ ದೀವುಂಕ್ ವರದಕ್ಕ ವಿಚಾರಿ ಮ್ಹಣ್ ಮಾಮ್ಮಿನ್ ದಿಲೆಂ ಕಿಸ್ಣಾಚ್ಯಾ ಮಾತ್ಯಾಕ್ ಖೊವಂವ್ಕ್ ಮಾಗೀರ್ ಉರಲ್ಲಿಂ ಮ್ಹಾಕಾ ಮೊಡ್ಕುರಿಂ ಆನಿ ರಡ್ಕುರಿಂ ಖಂಯ್ಚ್ಯಾ ಕರ್ಮಾಕ್? ಕೊಣೆಂ ಫಾರ್ಲಿಂ, ಕೊಣೆಂ ಲಿಪಯ್ಲಿಂ ತಾಚೆರ್ ಸೊಧ್ ಹಾಂವೆಂ ಚಲಯ್ಲೊ ‘ಹಾಂವೆಂ ಹಾಡಲ್ಲಿಂ ಪಾಕಾಂ ತುಮಿ ಕಶಿಂ ಚೊರ್ಲಿಂ?’ ಬಯ್ಯಾ ಹಾಸ್ಲೆಂ ‘ಹಾಡಲ್ಲಿಂ ವ್ಹಯ್, ಪುಣ್ ಮೊರಾನ್ ಸಾಂಡ್ಲಲಿಂ!’ ದೊಳ್ಯಾ ಖಾಂಚಿಂತ್ಲಿಂ ದುಕಾಂ ಪುಸುನ್ ಭಾಯ್ರ್ ಯೆತಾನಾ ಬೋಳ್ ರುಕಾರ್ ಭಿಜಲ್ಲೊ  ಕಾವ್ಳೊ ಆಂಗ್ ಪಾಪ್ಡುಂಕ್ ಲಾಗ್ಲೊ ಥೆಂಬೆ ಉಸಾಳ್ಳೆಚ್ ತೊ ಸುಶೆಗಾತ್ ಉಬ್ಲೊ -ಜೊ. ಸಿ. ಸಿದ್ದಕಟ್ಟೆ “ನವಿಲು ತೊರೆದ ಗರಿಗಳು” ಬಯಲಲ್ಲಿ ನವಿಲು ತೊರೆದ ಗರಿಗಳನ್ನು ಆರಿಸಿ ಆರಿಸಿ ತಂದಿದ್ದೆ. ಕೆಲವು ಚಿಕ್ಕವು, ಇನ್ನು ಕೆಲವು ದೊಡ್ಡವು, ಆಮೇಲೆ .. ಅವೇ ನಮ್ಮ ಮನಗಳನ್ನು ಒಡೆದವು. ಬಬ್ಲು ಒಂದು ಕದ್ದೊಯ್ದ ಅವನ ಗೆಳೆಯರಿಗೆ ತೋರಿಸಿ ಎದೆ ಉಬ್ಬಿಸಲು, ಅಕ್ಕ ಕೇಳದೆ ಎತ್ತಿಟ್ಟಳು ಪುಸ್ತಕದ ನಡುವೆ ಮುಚ್ಚಿಟ್ಟು ಮರಿ ಮಾಡಲು, ಅಣ್ಣನಿಗೂ ಒಂದು ಗರಿ ಬೇಕಿತ್ತು ಸಂಪಿಗೆ ವನದ ಮರೆಯಲ್ಲಿ “ಅವಳಿಗೆ” ಕೊಡಲು, ವರದಕ್ಕ ಕೇಳಿದರೆಂದು ಅಮ್ಮ ಕೊಟ್ಟಳು ಅವರ ಕೃಷ್ಣನ ತಲೆಗೆ ಸಿಕ್ಕಿಸಲು, ಇನ್ನು ನನಗೆ ಉಳಿದದ್ದು ಬರೀ ಹರಿದವು ಮತ್ತು ಮುರಿದವು …. ಯಾವ ಕರ್ಮಕ್ಕೆ?? ಯಾರ‍್ಯಾರೋ  ಮುಚ್ಚಿಟ್ಟರು, ಎತ್ತಿಟ್ಟರು, ಕದ್ದೊಯ್ದರು.. ಜೋರಾಗಿ ಗದರಿಸಿದೆ ಕೋಪ ತಡೆಯದೆ “ನಾನು ತಂದ ಗರಿಗಳವು.. ಹೇಗೆ ಕದ್ದಿರಿ ನೀವು?” ಅಕ್ಕ ನಗುತ್ತ… “ನೀನು ತಂದಿದ್ದು ಹೌದು.. ಆದರೂ… ನವಿಲು ತಾನೇ ತೊರೆದಿದ್ದು..?” ಕಣ್ಣಂಚಿನ ದುಃಖವನ್ನು ಒರೆಸಿ ಹೊರಗೆ ಬಂದಾಗ ಬೋಳು ಮರದಲ್ಲಿ ಕೂತ ಕಾಗೆಯೊಂದು ಪಟಪಟನೆ ರೆಕ್ಕೆ ಬಡಿಯುತ್ತ ಹನಿಗಳುದುರಿಸಿ ಹಾರಿಹೋಯಿತು…. ನಿರಾಳವಾಗಿ. —ಶೀಲಾ ಭಂಡಾರ್ಕರ್. ರಾಜಿನಾಮೊ ಪಿಕ್ಕಾಸ್ ಆನಿ ಖೊರೆಂ ನವ್ಯಾನ್ ಡ್ಯೂಟೆಕ್ ಹಾಜಿರ್ ಜಾಲಿಂ, ಫುಲಾ ತೊಟಾಂತ್. ಡ್ಯೂಟೆಕ್ ಲಾಗ್‍ಲ್ಲ್ಯಾ ಪಿಕ್ಕಾಸಾನ್ ಮೋವ್ ಆಸ್ಲೆಕಡೆ ಖೊಂಡುಂಕ್ ಸುರು ಕೆಲೆಂ ಖೊಂಡ್ಚ್ಯಾ ಹುಮೆದಿನ್ ಆಡ್ ಮೆಳ್‍ಲ್ಲೊ ಉದ್ಕಾ ಪೈಪ್‍ಯೀ ಉಕ್ಲುನ್ ಘಾಲೊ ದುಸ್ರೆದಿಸಾ ‘ಚತ್ರಾಯೆಸಂಗಿಂ’ ಪಿಕ್ಕಾಸಾಕ್ ಮುರೊ ಖೊಂಡುಂಕ್ ‘ಡ್ಯೂಟಿ’ ಘಾಲಿ, ಎಕೆಕ್ ಘಾಸಾಕೀ ದಾಂತಾಥಾವ್ನ್ ಕಿಟಾಳಾಂ ಉಸ್ಳೊನ್ ಹಿಂಸಾ ಜಾತಾಲಿ, ತಿತ್ಲ್ಯಾಕ್‍ಚ್ ಪಿಕ್ಕಾಸಾನ್ ‘ರಾಜಿನಾಮೊ’ ದಿಲೊ. ಪಿಕ್ಕಾಸಾನ್ ಖೊಂಡುನ್ ಗೆಲ್ಲೆಕಡೆ ಖೊರ್‍ಯಾಕ್ ಡ್ಯೂಟಿ ಲಾಗ್ಲಿ ಮಾತಿ ವೊಡ್ಚಿ, ಹದಾ ಕರ್‍ಚಿ ಮ್ಹೆಳೆಂ ಶೆಣ್ ವೊಡುನ್ ಘಾಲ್ಚೆಂ.. ತಿಕಾಯ್ ಹಿಂಸಾ ಜಾತಾಲಿ ತೆಂ ವಾತಾವರಣ್‍ಚ್ ನಾಕಾ ಆಸ್ಲೆಂ.. ತರೀ, ಆಪ್ಣಾಕುಶಿಕ್‍ಚ್ ಯೇವ್ನ್ ಪಡ್ಚ್ಯಾ ಮೆಳ್ಯಾಮದೆಂಯ್ ಖೊರೆಂ ರಾವ್ಲೆಂ, ‘ಗುಲೊಬಾಚ್ಯಾ ಪರ್ಮಳಾಕ್ ಲಾಲೆವ್ನ್’ ರಾಜಿನಾಮೆ ಹಾರೆ ಮತ್ತು ಗುದ್ದಲಿಗಳೆರಡೂ ಹೊಸದಾಗಿ ಡ್ಯೂಟಿಗೆ ಸೇರಿದವು ಹೂವಿನ ತೋಟದೊಳಗೆ. ಡ್ಯೂಟಿಯಲ್ಲಿ ತೊಡಗಿದ ಹಾರೆಯು ಮೆತ್ತಗಿರುವಲ್ಲಿ ಅಗೆಯಲು ಆರಂಭಿಸಿತು. ಅಗೆಯುವ ಹುಮ್ಮಸ್ಸಿನಲ್ಲಿ ಅಡ್ಡ ಬಂದ ನೀರಿನ ಪೈಪನ್ನೂ ಬಗೆದು ಹಾಕಿತು. ಮರುದಿನ ಮತ್ತೆ ಹಾರೆಗೆ ಎಚ್ಚರದಿಂದ ಕೆಲಸಮಾಡಲು ಎಚ್ಚರಿಸಿ ಕಲ್ಲಿರುವ ಕಡೆ ಅಗೆಯುವ ಡ್ಯೂಟಿ ಬಿತ್ತು. ಒಂದೊಂದು ತುತ್ತಿಗೊಂದೊಂದು ಕಿಡಿಗಳು ಹಲ್ಲಿನಿಂದ ಸಿಡಿಯುವಾಗ ಭಾರೀ ಹಿಂಸೆ ಅನಿಸಿತು. ಅಷ್ಟಕ್ಕೇ ಹಾರೆಯು ರಾಜಿನಾಮೆ ಕೊಟ್ಟಿತು. ಹಾರೆ ಅಗೆದು ಹೋಗಿದ್ದ ಕಡೆ ಈಗ ಗುದ್ದಲಿಯ ಡ್ಯೂಟಿ ಬಂತು. ಮಣ್ಣು ಅಗೆಯುವುದು ಹದಗೊಳಿಸುವುದು, ಸೆಗಣಿ ಹಾಕಿ ಮಟ್ಟ ಮಾಡುವುದು. ಅದಕ್ಕೂ ಹಿಂಸೆಯೇ ಇದು. ಈ ವಾತಾವರಣವೇ ಬೇಡ ಅನಿಸುತಿತ್ತು. ಆದರೂ.. ತನ್ನ ಬುಡಕ್ಕೆ ಬಂದು ಅಂಟುವ ಗಲೀಜಿನ ನಡುವೆಯೂ ಗುದ್ದಲಿ ಅಲ್ಲಿಯೇ ನಿಂತಿತ್ತು.. “ಗುಲಾಬಿಯ ಪರಿಮಳದ ಹಂಬಲದಿಂದ” ಕನ್ನಡಕ್ಕೆ: ಶೀಲಾ ಭಂಡಾರ್ಕರ್. ——————————————————— ಫೋಟೊ ಆಲ್ಬಂ ***************************************************************** ಚಿತ್ರ-ಬರಹ ಶೀಲಾ ಭಂಡಾರ್ಕರ್

ಕೊಂಕಣಿ ಕವಿ ಪರಿಚಯ Read Post »

You cannot copy content of this page

Scroll to Top