ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಅಬಾಬಿ ಕಾವ್ಯ

ಕವಿತೆ ಅಬಾಬಿ ಕಾವ್ಯ ಹುಳಿಯಾರ್ ಷಬ್ಬೀರ್ 01 ತಸ್ಬಿ ಮುಟ್ಟಿದ ಕೈಹಳೆಯ ಕೋವಿಯನಳಿಕೆಯಲ್ಲಿನ ಗೂಡು ಬಿಚ್ಚಿತುಷಬ್ಬೀರ್…!ಆತ್ಮ ರಕ್ಷಣೆಗಾಗಿ. 02 ಸಾಮರಸ್ಯದ ಹೆಸರೇಳಿರಾಮ ರಹೀಮರನ್ನುದ್ವೇಷಿಗಳಾಗಿಸಿರುವರುಷಬ್ಬೀರ್…!ಖಾದಿ ಖಾವಿಯ ಮುಖವಾಡ. 03 ಜಾನಿಮಾಜ಼್ ನ ಮೇಲೆಜಾನ್ ಇಟ್ಟು ನಮಾಜ಼್ಆವಾಹಿಸಿಕೊಂಡವರುಷಬ್ಬೀರ್…!ಭಗವಂತನಿಗೆ ಶರಣಾದವರು. 04 ಪುಡಿಗಾಸಿನಲ್ಲೇಇಡೀ ಬದುಕ ಬಿಡಿ ಬಿಡಿಯಾಗಿಅಂದೇ ದರ್ಬಾರ್ ಮಾಡುವರುಷಬ್ಬೀರ್…!ನನ್ನ ಜನ ನನ್ನವರು. 05 ಯಾ..! ಅಲ್ಲಾ…ಎಲ್ಲಾ ಯೋಜನೆಗಳಂತೆನನ್ನ ಕನಸುಗಳಿಗೂಷಬ್ಬೀರ್…!ಸಬ್ಸಿಡಿ ಕೊಡಿಸುವೆಯಾ..? *************************

ಅಬಾಬಿ ಕಾವ್ಯ Read Post »

ಕಾವ್ಯಯಾನ

ಕವಿತೆ ಕಮಲೆ ಮಾಂತೇಶ ಬಂಜೇನಹಳ್ಳಿ ಕೆರೆಯ ಏರಿ ಮೇಲೆನಿನ್ನ ಕನಸುಗಳ ಬೆನ್ನೇರಿಕುಳಿತ ನಾ… ಅಲ್ಲೇ ಸನಿಹತಣ್ಣಗೆ ಸುಳಿದೋಗುವಾಗಕಾಣಲಿಲ್ಲವೇ? ಕೆರೆ ದಿಣ್ಣೇಲಿ ಆಜಾನುಬಾಹುಆಲದ ಬಿಳಲು, ನಾ ಜೀಕುವಜೋಕಾಲಿ, ನೀನೇ ಹರಿದದ್ದು..ತಿಳಿದೂ ಬೇಸರಿಸದೆಮರೆತುಬಿಟ್ಟಿರುವೆ… ರವಿ ಪಡುವಣಕ್ಕಿಳಿದ,ಕಣ್ಣುಗಳೋ ಮಬ್ಬಾಗುತಿವೆ..ನನ್ನವೇ ಕನಸುಗಳಪುಕ್ಕಟೆ ಬಿಕರಿಗಿಟ್ಟಿದ್ದೇನೆ‌‌..ಚೌಕಾಸಿಯಿನ್ನೇಕೆ?!..ನೀಡಿಬಿಡುವೆ ನಿನಗೆ,ಕಾಣಬಾರದೇ?.. ಇಳಿ ಹೊನ್ನ ಸಂಜೇಲಿ,ನಿರ್ಜನ ನೀರವ ಮೌನದಿ,ನಿರೀಕ್ಷೆಯ ಕಂಗಳಲಿ,ಸುತ್ತಲೂ ಹುಡುಕುತಲೇ..ನೆನಪುಗಳ ಅಡಕುತಿರುವೆ,ಬರಬಾರದೇ?.. ಕೆರೆಯೊಳಗೆದ್ದು ತಾಕಿಯೂ..ಅಂಟದ ತೇವ ಬಿಂದುಗಳ್ಹೊತ್ತಪಂಕಜೆಯ ಪತ್ರಗಳಂತೆ,ನನ್ನ ಕನಸುಗಳಕೊಳ್ಳಲೊಪ್ಪದ, ಅಪ್ಪದಓ ಕಮಲೇ..ಒಮ್ಮೆ ಒಪ್ಪು ಬಾರೆ… **********************

Read Post »

ಇತರೆ, ಪ್ರಬಂಧ

ಆಡು ಭಾಷೆಯ ವೈಶಿಷ್ಟ್ಯತೆ

ಪ್ರಬಂಧ ಆಡು ಭಾಷೆಯ ವೈಶಿಷ್ಟ್ಯತೆ ಬಾಲಾಜಿ ಕುಂಬಾರ ನಮ್ಮ ಉತ್ತರ ಕರ್ನಾಟಕದ ಭಾಷೆಗೂ ದಕ್ಷಿಣ ಕನ್ನಡದ ಮಾತುಗಾರಿಕೆಗೂ ತುಂಬಾ ವ್ಯತ್ಯಾಸ ಕಾಣುತ್ತೇವೆ. ಉತ್ತರ ಕರ್ನಾಟಕದ ಮಂದಿ ಹೇಳಿ ಕೇಳಿ ತುಂಬಾ ಸೀದಾ ಸಾದಾ, ಭಾಳ ಮುಗ್ದ ಸ್ವಭಾವದ ಗಟ್ಟಿ ಜನ, ಬಿಳಿ ಜೋಳ ರೊಟ್ಟಿ , ಫುಂಡೆ ಪಲ್ಯ ಜೊತೆಗೆ ಉಳಾಗಡ್ಡೆ ಖಾರಾ, ಹಸಿ ಖಾರಾ ತಿಂದರೂ ‘ಇನ್ನೂ ಸ್ವಲ್ಪ ಸಪ್ಪಗೆ ಆಗ್ಯಾದ್ ಪಲ್ಯ’ ಎನ್ನುವ ಜವಾರಿ ಜನ, ಎಲ್ಲಿ ಹೋದರೂ ಏನಾದರೂ ಹೊಸತನ ಕಾಣುವುದು, ಹೊಸ ಕಲಿಕೆ, ಹೊಸ ಅಲೋಚನೆ , ವಿಶಿಷ್ಟ ಕಾರ್ಯಗಳಿಗೆ ಹೆಸರುವಾಸಿ ಜನ ಉತ್ತರ ಕರ್ನಾಟಕ ಮಂದಿ, ಹೀಗಾಗಿ ಉತ್ತರ ಕರ್ನಾಟಕ ಭಾಷೆ ಕೂಡ ಅಷ್ಟೇ ವೈವಿಧ್ಯಮಯ ಲವಲವಿಕೆಯಿಂದ ಕೂಡಿದೆ.  ಇಲ್ಲಿನ ಜನ ಹೊರಗಡೆ ಹೋಗಲು ಬಸ್ ರೈಲುಗಳಲ್ಲಿ ಪ್ರಯಾಣ ಮಾಡಬೇಕಾದರೆ ಪಕ್ಕದ ಸೀಟಿನಲ್ಲಿ ಕುಳಿತಿರುವ ದಕ್ಷಿಣ ಕನ್ನಡ ಭಾಗದವರಿಗೆ ನಾವು ಬೀದರ್ ನವರು ಎಂದು ಹೇಳಬೇಕಾಗಿಲ್ಲ.  ‘ಎಲ್ಲಿ , ಕಲ್ಲಿ, ಹೊಂಟಾನ, ಹೋಗ್ಯಾನ’ ಇಷ್ಟು ಸಾಕು, ಅವರು ಅನಾಮತ್ತಾಗಿ ನೀವು ಬೀದರ್ ದವರು ಅಲ್ಲವೇ? ಎಂದು ಕೇಳೇ ಬೀಡ್ತಾರೆ.  ಇನ್ನೂ ನಮ್ಮ ಬೀದರ್, ಮೊದಲೇ ಗಡಿನಾಡು ಜಿಲ್ಲೆ ,  ಆ ಕಡೆ ‘ಎಕ್ಕಡ’ ಎನ್ನುವ ಆಂಧ್ರ ಪ್ರದೇಶ, ಹಾಗೇ ಸ್ವಲ್ಪ ದೂರ ಹೋದರೆ ‘ರಂಡಿ, ಪೊಂಡಿ’ ಎಂದು ಮತ್ತು ತೆಲುಗುಮಾತನಾಡುವ ತೆಲಂಗಾಣ, ಈ ಕಡೆ ‘ಕಸ,ಕಾಯಿ, ಗೇಲಾ, ಏ ರೇ’ ಎನ್ನುವ ಮರಾಠಿ ಪದಗಳು, ‘ಕಲ್ ‘ ಎನ್ನುವ ಹಿಂದಿ ಪದ ಕನ್ನಡದಲ್ಲಿ ‘ಕಲ್ಲು’ ಎನ್ನುವ ಅರ್ಥ ಕೊಡುತ್ತದೆ, ಹೀಗೆ ಕನ್ನಡದವರಿಗೆ ವಿಭಿನ್ನ ಅರ್ಥಗಳಾಗಿ ಕಾಣುತ್ತವೆ.  ಬೀದರಿನ ಹೆಚ್ಚಿನ ಜನರು ತ್ರಿಭಾಷಾ ಪಾಂಡಿತ್ಯ ಉಳ್ಳವರು, ಕನ್ನಡ ನಾಡಿನ ಯಾವುದೇ ಭಾಗದಲ್ಲಿ ಹೋಗಿ, ನಾಲ್ಕೈದು ಕಿ.ಮೀ. ಗೊಂದು ಬದಲಾಗುವ ಭಾಷಾಶೈಲಿ, ಜನರ ಬದುಕು, ಕಲೆ, ಉಣ್ಣುವ ಅನ್ನ, ತೊಡುವ ಬಟ್ಟೆ ಎಲ್ಲವೂ ಭಿನ್ನ ವಿಭಿನ್ನ, ಇದೇ ನಮ್ಮ ನಾಡಿನ ವೈಶಿಷ್ಟ್ಯತೆ ಕನ್ನಡದ ಅಸ್ಮಿತೆ, ಹಸಿರು, ಉಸಿರು ಎಲ್ಲವೂ ಒಳಗೊಂಡಿದೆ.  ನಾವೊಮ್ಮೆ ಶಾಲಾ ಮಕ್ಕಳಿಗೆ ಮೈಸೂರು ಭಾಗದ ವಿವಿಧ ಕಡೆ ಪ್ರವಾಸಕ್ಕೆ ತೆಗೆದುಕೊಂಡು ಹೋಗಿದ್ದೇವು, ಆ ಭಾಗದ ಬಹುತೇಕ ಗ್ರಾಮ, ಪಟ್ಟಣಗಳ ಹೆಸರು ಓದಿಕೊಂಡು ನಮ್ಮ ಶಾಲಾ ಮಕ್ಕಳಿಗೆ ವಿಚಿತ್ರ  ಅನುಭವ ಹಾಗೂ ನಗುತ್ತಿದ್ದರು. ಹಾಗೇ ಬೀದರ್ ಜಿಲ್ಲೆಯಲ್ಲಿ ಒಂದು ಗ್ರಾಮದ ಹೆಸರು ‘ಹುಡುಗಿ’ ಅಂತ ಇದೆ, ಬೇರೆ ಭಾಗದವರು ಈ ಕಡೆ ಬಂದರೆ ಈ ‘ಹುಡುಗಿ’ ಎಲ್ಲಿ ಸರ್, ಇನೆಷ್ಟು ದೂರ ಸರ್ ಎಂದು ಕೇಳಿ ತುಂಬಾ ನಗಬಹುದು, ಆ ಕಡೆ ‘ಸೂಳೆಬಾವಿ’ ಎಂದು ಕೇಳಿ ನಗಬಹುದು, ಆದರೆ ಹಾಸ್ಯವಾಗಿ ಕಂಡರು ತನ್ನದೇ ಆದ ವೈವಿಧ್ಯಮಯ ಹೊಂದಿರುವ ಪ್ರದೇಶಗಳು ಎಂದು ಅರ್ಥೈಸಿಕೊಳ್ಳಬೇಕು. ಹಾಗೇ ಉತ್ತರ ಕರ್ನಾಟಕದ ತಿಂಡಿ ತಿನಿಸು, ಹೆಸರು, ಅಡ್ಡ ಹೆಸರು, ಮಾತು, ಬೈಗಳು ತುಂಬಾ ವಿಚಿತ್ರ, ಇಂಗ್ಲಿಷ್ ಬಾರದ ನಮ್ಮ ಹಳ್ಳಿಯ ಜನರೂ ಕೂಡ ಗ್ಲಾಸ್ ಬದಲಿಗೆ ‘ಗಿಲಾಸ್’ ಫೋಟೋ ಬದಲಿಗೆ ‘ಫೂಟೂ’ ಕೋಟೆಗೆ ‘ಕ್ವಾಟೀ’ ಮದುವೆಗೆ ‘ಮದಿ’ ಮುದುಕ ಬದಲು ‘ಮುದ್ಯಾ’ ಖರೀದಿ ಬದಲಾಗಿ ಖರ್ದಿ, ಬಟ್ಟೆ ಬದಲಿಗೆ ‘ಅರ್ಬಿ’ ಮಕ್ಕಳಿಗೆ ನಿಮ್ಗು ಎಷ್ಟು ‘ಪಾರುಗೋಳು’ ಎಂದು ಕೇಳುತ್ತಾರೆ.  ಒಮ್ಮೆ ಮಹಾರಾಷ್ಟ್ರದ ಒಂದು ಪ್ರವಾಸಿ ಸ್ಥಳಕ್ಕೆ ಭೇಟಿ ನೀಡಿದ್ದಾಗ ಅಲ್ಲಿ ‘ಕಚರಾ ಕುಂಡಿ’ ಎಂದು ಮರಾಠಿಯಲ್ಲಿ ಬರೆದಿದ್ದು ನೋಡಿ ನಾವೇ ನಕ್ಕಿದ್ದೇವೆ. ಇಂತಹ ಬಹುತೇಕ ಮಿಶ್ರಿತ ಭಾಷೆ, ಅನ್ಯ ಭಾಷೆ, ವಿವಿಧ ಅರ್ಥಗಳಿಂದ ಕೂಡಿದ್ದು ಈ ನೆಲದ ವಿಶೇಷ ಎನ್ನಬಹುದು.  ತರಕಾರಿಗಳಿಗೂ ವಿಚಿತ್ರವಾಗಿ ಕರೀತಾರೆ, ಉಳಾಗಡ್ಡೆ ಬದಲು ‘ಉಳಗಡ್ಡಿ’ ಬೆಳ್ಳುಳ್ಳಿ ಬದಲು ‘ಬೆಳಗಡ್ಡಿ’ ಕೊತ್ತಂಬರಿ ಅನ್ನುವ ಬದಲು’ ಕೊತ್ಮೀರಿ, ಟಮೋಟೋ ಅನ್ನದೇ ‘ಟಮಾಟೆ ,ಟಮಟಾ’ ಮೌಂಸದ ಬದಲು ಇಗೊತ್ತು ಸಂಡೇ ಅದಾ ‘ಖಂಡಾ’ ತಿಂಬರೀ ಅಂತಾರೆ. ಶಾಲೆ ಅಂತೂ ಕರೆಯುವ ಅಪರೂಪದ ಜನರ ನಡುವೆ ಈವತ್ತು ‘ಸಾಳಿ’ ಅವನಾ ಸರ್’ ಎಂದೇ ಬಹಳಷ್ಟು ಜನ ಕೇಳುತ್ತಾರೆ. ಕೆಟ್ಟದ್ದಕ್ಕೆ ‘ಖರಾಬ್’ ಎಂದು, ಚಟಗಳಿಗೆ ‘ರಾಟಿ’ ಜೋಳಕ್ಕೆ ‘ಜ್ವಾಳಾ’, ಜ್ವರ ಬಂದರೆ ‘ಉರಿ’ ಬಂದವ ಎನ್ನುತ್ತಾರೆ.  ಇನ್ನೂ ಸಿಟ್ಟು ಬಂದಾಗ  ‘ಸುಳೆಮಗಾ’ ‘ಅಕ್ಕಲ್’  ಆ ಮಗಾ ಎಷ್ಟು ಹುಷಾರ್ ಆಗ್ಯಾನ್ ಅಂತ ‘ಜರಾ ತೋರ್ಸತಾ’ ಎನ್ನುತ್ತಾರೆ, ಮತ್ತೆ ಚಿಕ್ಕ ಮಕ್ಕಳಿಗೆ ಸಲುಗೆಯಿಂದ ‘ಹಲ್ಕಟ್ ಹಾಟ್ಯಾ’ ‘ಭಾಡಕಾವ್’ ‘ಮುಕುಡ್ಯಾ’ ಅವನ ‘ಇವ್ನ ಹೆಣ ಎತ್ಲಿ’ ಎಂದು ಪ್ರೀತಿಯಿಂದಲೇ ಬೈಯ್ತಾರೆ. ಹೀಗಾಗಿ ‘ಬೀದರ್ ಜಿಲ್ಲೆಯ ಬೈಗಳು’ ಎನ್ನುವ ಪುಸ್ತಕ ಬೀದರ್ ಭಾಷೆ ವೈಶಿಷ್ಟ್ಯತೆ ಬಿಂಬಿಸುತ್ತದೆ. ಇತ್ತೀಚೆಗೆ ಲಾಕ್ ಡೌನ್ ಸಂದರ್ಭದಲ್ಲಿ ‘ಲಂಗ್ ಡಂಗ್’ ‘ಲಾಕ್ ಡಾನ್’ ಮುಖ ಬದಲಿಗೆ ‘ಮೂತಿ’ ‘ಮಾರಿ’ ಮಾಸ್ಕ್ ಬದಲಿಗೆ ‘ಮುಸ್ಕಿ’ ಡ್ರೆಸ್ ಬದಲು ‘ಡಿರೇಸ್’ ‘ಸಾರಿ’ಗೆ ‘ಸೀರಿ’ ಒನ್ ಪ್ಲಾಟ್ ಜಾಗ ಎನ್ನದೇ ‘ಒಂದು ಪಿಲೇಟ್ ಜಾಗ’ ಎಂದು ಉಚ್ಚರಿಸುತ್ತಾರೆ. ಕನ್ನಡ ನಾಡಿನ ಇಂಗ್ಲಿಷ್ ಬಲ್ಲವರಿಗೆ ಇವೆಲ್ಲ ಹಾಸ್ಯ ಅನ್ನಿಸಬಹುದು, ಆದರೆ ತಾಯ್ನುಡಿಯವರು ಅವುಗಳನ್ನು ಉಚ್ಚರಿಸುವುದು ಬೇರೆ ರೀತಿ.  ಹೆಚ್ಚು ಕಾಡಿಸುವರನ್ನು ಕಂಡು ಅವನ ‘ಕಟ ಕಟಿ’ ಜಾಸ್ತಿ ಮತನಾಡಿದರೆ ಹೆಚ್ಚಿಗ್ ‘ತಿನ್ಕಬ್ಯಾಡ್’ ಅಂತಾರೆ, ಮೆಣಸಿನಕಾಯಿ, ಕತ್ತೆ, ಮೊಸರೆ, ತುಪ್ಪ, ಜೀರ್ಗೆ, ಉಳಾಗಡ್ಡೆ, ಲಂಗೋಟಿ, ಬ್ಯಾಳೆ ಎನ್ನುವ ಅಡ್ಡ ಹೆಸರುಗಳು ಈ ಪ್ರಾದೇಶಿಕ ವೈಶಿಷ್ಟ್ಯ ಹಾಗೂ ಪುರಾತನ ಸಂಸ್ಕೃತಿಯ ಸಂಕೇತವಾಗಿ ಗುರುತಿಸುತ್ತೇವೆ.  ಹಾಗೇ ನಮ್ಮ ಬೀದರ್ ಕಲ್ಬುರ್ಗಿ ಭಾಗದಲ್ಲಿ ಬಹುತೇಕ ಹಣ್ಣುಗಳಿಗೆ ಹಣ್ಣು ಎಂದು ಕರೆಯುವ ಬದಲಿಗೆ ಕಾಯಿ ಎಂದೇ ಉಚ್ಚರಿಸುತ್ತಾರೆ. ಮಾವಿನಕಾಯಿ, ಬಾಳೆಕಾಯಿ, ಕ್ಯಾರೆಕಾಯಿ ಎನ್ನುತ್ತಾರೆ. ಸೀತಾಫಲ ಹಣ್ಣಿಗೆ ಚಿಪ್ಪುಲಕಾಯಿ, ನೆರಳೆ ಹಣ್ಣಿಗೆ ನೆಳ್ಳೆಕಾಯಿ ಕರೆಯುತ್ತಾರೆ,  ಹೆಜ್ಜೆ ಹೆಜ್ಜೆಗೂ ಭಾಷಾ ಭಿನ್ನತೆ ಮಾತಿನ ಉಚ್ಚಾರದಲ್ಲಿ ವ್ಯತ್ಯಾಸ, ವಿವಿಧ ಅರ್ಥದಲ್ಲಿ ವ್ಯತ್ಯಾಸಗಳು ಕಂಡುಬರುತ್ತವೆ. ರೊಟ್ಟಿ- ಗಿಟ್ಟಿ, ಬ್ಯಾಳಿ- ಗೀಳಿ, ಎನ್ನುವ ಹಲವು ವಿಭಿನ್ನತೆಗಳು ಇರುವಾಗ ಈ ಕೆಲವರು ಕೊತ್ತುಂಬರಿಗೆ ಕೊತ್ಮೀರಿ ಎನ್ನುವುದು ಏನು ದೊಡ್ಡ ವಿಷಯವೇ ಆಗಬೇಕಿರಲಿಲ್ಲ‌. ಚಂದಿರನಿಗೆ ‘ಚಂದಮಾಮ’, ಭೂಮಿಗೆ ‘ತಾಯಿ’, ನೀರಿಗೆ ‘ದೇವತೆ’ ಎಂದು ಪೂಜಿಸುತ್ತಾರೆ. ಇನ್ನೂ ಅನೇಕ ವ್ಯಕ್ತಿಗಳ ಹೆಸರುಗಳು ಕೂಡ ಆಯಾ ಪ್ರಾದೇಶಿಕ ಪರಂಪರೆ, ಐತಿಹಾಸಿಕ ಹಿನ್ನೆಲೆಯನ್ನು ಪ್ರತಿಬಿಂಬಿಸುತ್ತವೆ. ಉತ್ತರ ಕರ್ನಾಟಕ ಭಾಗದಲ್ಲಿ ಬಸವಾದಿ ಶರಣರ ಪ್ರಭಾವ ಹೆಚ್ಚಿದೆ, ಬಸಪ್ಪ , ಶರಣಪ್ಪ, ಕಲ್ಲಪ್ಪ, ಮಹಾದೇವಿ, ಶರಣಮ್ಮ, ಹೀಗೆ ಪಟ್ಟಿ ಬೆಳೆಯುತ್ತದೆ. ಇನ್ನೂ ಒಂದು ವಿಚಿತ್ರ ಎಂದರೆ ಕೃಷಿಕರು ಹೊಲದಲ್ಲಿ ಕೆಲಸಕ್ಕೆ ಹೋದಾಗ ಮಗು ಜನನ ಆಗಿರುವ ಕಾರಣಕ್ಕೆ ಅಡೆಪ್ಪಾ, ಹುಲ್ಲಪ್ಪ ಎನ್ನುವ ಹೆಸರುಗಳು ಉಂಟು, ದೇವರ ಹೆಸರುಗಳೇ ತಮ್ಮ ಮಕ್ಕಳಿಗೆ ಹೆಸರಿಡುವ ಪರಂಪರೆ ನಮ್ಮ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿದೆ ಎಂದು ಹೇಳಬಹುದು. ಸಮಾಜದಲ್ಲಿ ಕೊರೊನಾ ವೈರಸ್ ಗಿಂತಲೂ ಭೀಕರ ಮತ್ತು ಅಷ್ಟೇ ಮಾರಕವಾಗಿ ಹರಡಿರುವ ‘ಕೋಮು ವೈರಸ್ ‘ ಈಗ ಬಹುತೇಕ ಮೆದುಳುಗಳ ಒಳಹೊಕ್ಕಿ ಕೊಳೆತು ನಾರುತ್ತಿದೆ. ಹಳ್ಳಿಗಾಡಿನ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಬಸಪ್ಪ – ಬಶೀರ್ ಅವರಿಗೆ ಯಾವುದೇ ಜಾತಿ ಧರ್ಮಗಳಿಲ್ಲ, ತಮ್ಮನ್ನು ತಾವು ಭಾಯಿ – ಭಾಯಿಗಳಾಗಿ ಅನ್ಯೋನ್ಯತೆ ಬೆಳೆಸಿಕೊಂಡು ಬದುಕುತ್ತಿದ್ದಾರೆ. ರಕ್ತ ಸಂಬಂಧಗಳು ಇರದೇ ಇರುವ ಮುಸ್ಲಿಂ ಸಹೋದರು ಹಿಂದೂ ಸಹೋದರಿಯರಿಗೆ ಅವ್ವ, ಸಣ್ಣಪ್ಪಾ, ದೊಡ್ಡಪ್ಪ , ಕಾಕಾ ಎಂದು ಆಪ್ತವಾದ ಸಂಬಂಧ ಹೊಂದಿದ್ದಾರೆ. ಹೀಗಾಗಿ ಹಳ್ಳಿಗಾಡಿನಲ್ಲಿ ಇಂದಿಗೂ ಜಾತಿ ಧರ್ಮಗಳ ಚೌಕಟ್ಟ ಮೀರಿ ಸೌಹಾರ್ದತೆ ಪ್ರೀತಿಯೇ ಉಸಿರಾಡುತ್ತಿದೆ.  ಆಡು ಭಾಷೆಯ ಆಳ ಯಾರಿಗೂ ನಿಲುಕಲು ಸಾಧ್ಯವಿಲ್ಲ, ಅದರ ವ್ಯಾಪ್ತಿ ವಿಶಾಲವಾಗಿ ಬೇರೂರಿದೆ. ಇದುವೇ ಕನ್ನಡ ನಾಡಿನ ವಿಶೇಷ ಗಮ್ಮತ್ತು, ಇದರೊಳಗೆ ಅಡಗಿದೆ ಕನ್ನಡತನದ ತಂಪು, ಇಂಪು, ಉಸಿರು, ಹಸಿರು… ಎಲ್ಲವೂ…ಹೌದಲ್ಲವೇ..? *************************************************

ಆಡು ಭಾಷೆಯ ವೈಶಿಷ್ಟ್ಯತೆ Read Post »

ಇತರೆ

ಕನ್ನಡ ಸಾಹಿತ್ಯ ಪರಿಷತ್ತು ನಡೆದ ಬಂದ ದಾರಿ..!

ಕನ್ನಡ ಸಾಹಿತ್ಯ ಪರಿಷತ್ತು ನಡೆದ ಬಂದ ದಾರಿ..! ಈಗ ಕನ್ನಡ ಸಾಹಿತ್ಯ ಪರಿಷತ್ತಿಗೆ ಚುನಾವಣೆ ನಡೆಬೇಕಿದೆ. ಪ್ರಸ್ತವಾಗಿ ಮ.ನು.ಬಳೆಗಾರರ ಅವಧಿ ಮುಗಿದಿದೆ. ಅದಕ್ಕಾಗಿ ಈಗಾಗಲೇ ತಯ್ಯಾರಿಯೂ ನಡೆದಿದೆ. ಹಾಗಾದರೆ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ನಡೆದು ಬಂದ ದಾರಿಯನ್ನು ಅವಲೇಕಿಸೋಣ..! ಬ್ರಿಟಿಷ್‌ ಸರ್ಕಾರದ ಆಡಳಿತಕ್ಕೆ ಒಳಪಟ್ಟಿದ್ದ ಮದ್ರಾಸ್‌, ಮುಂಬೈ ಪ್ರಾಂತ್ಯಗಳಲ್ಲಿ ದ್ವೀಪಗಳಂತೆ ಸೊಂಡೂರು, ಸವಣೂರು, ರಾಮದುರ್ಗ ಮುಂತಾದ ಹಿರಿಯ, ಕಿರಿಯ ಸಂಸ್ಥಾನಗಳು ಇದ್ದವು. ಕನ್ನಡ ಜನ ಭಿನ್ನ ಭಿನ್ನ ಆಡಳಿತ ಘಟಕಗಳ ಹಿಡಿತದಲ್ಲಿದ್ದರೂ ಅವರು ಆಡುತ್ತಿದ್ದ ಕನ್ನಡ ಭಾಷೆಯ ಮೇಲೆ ಅನ್ಯ ಭಾಷಾ ಪ್ರಭಾವ ಬಿದ್ದು, ಉಚ್ಚಾರಣೆಯಲ್ಲಿ ವ್ಯತ್ಯಾಸಗಳು ಉಂಟಾಗಿದ್ದವು. ಇವುಗಳ ಪರಿಣಾಮವಾಗಿ ವಿವಿಧ ಪ್ರದೇಶಗಳ ಕನ್ನಡಿಗರು ಅಪರಿಚಿತರಂತೆ ವ್ಯವಹರಿಸುವ ಅಸ್ವಾಭಾವಿಕ ಪರಿಸ್ಥಿತಿ ಉಂಟಾಗಿತ್ತು. ಆಗ ಮೈಸೂರು ಸಂಸ್ಥಾನದ ಅಂದಿನ ದಿವಾನರಾಗಿದ್ದ ಸರ್‌.ಎಂ.ವಿಶ್ವೇಶ್ವರಯ್ಯನವರು ಕನ್ನಡ ಭಾಷೆ, ಸಂಸ್ಕೃತಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಅವಶ್ಯಕತೆಗಾಗಿ ‘ಮೈಸೂರು ಸಂಪದಭ್ಯುದಯ ಸಮಾಜ’( ಮೈಸೂರು ಎಕನಾಮಿಕ್‌ ಕಾನ್ಫರನ್ಸ್‌ ) ರಚಿಸಿದರು. ವಿದ್ಯಾವಿಷಯಗಳಿಗಾಗಿ ಸಂಬಂಧಪಟ್ಟಂತೆ ವಿದ್ಯಾವಿಷಯಕ ಮಂಡಳಿ ರೂಪಿಸಿ, ಆ ಜವಾಬ್ದಾರಿಯನ್ನು ಹೆಚ್‌.ವಿ.ನಂಜುಂಡಯ್ಯನವರಿಗೆ ವಹಿಸಿದರು. ಮೈಸೂರು ಸಂಪದಭ್ಯುದಯ ಸಮಾಜವು 03.10.1914ರ ವಾರ್ಷಿಕ ಅಧಿವೇಶನದಲ್ಲಿ, ಕರ್ನಾಟಕ ಭಾಷೆಯಲ್ಲಿ ವಿವಿಧ ಗ್ರಂಥಗಳನ್ನು ರಚಿಸಿರುವವರನ್ನ ಪ್ರೋತ್ಸಾಹಿಸಲು ನಿರ್ಧರಿಸಿತು. ಈ ನಿಟ್ಟಿನಲ್ಲಿ ತನ್ನ ವಿದ್ಯಾವಿಷಯಕ ಮಂಡಳಿಯ ಮೂಲಕ ಒಂದು ಉಪಸಮಿತಿಯನ್ನು ರಚಿಸಿತು. ಉಪಸಮಿತಿಯು ಕನ್ನಡ ಭಾಷಾ ಸಾಹಿತ್ಯದ ಅಭಿವೃದ್ಧಿ ಮಾರ್ಗವನ್ನು ಕುರಿತು ಸಲಹೆ ಪಡೆಯಲು ತೀರ್ಮಾನಿಸಿ ಐದು ಭಾಗಗಳಾಗಿ ವಿಂಗಡಿಸಿತು. 1) ಕನ್ನಡ ನಾಡಿನ ಬೇರೆ ಬೇರೆ ಭಾಗಗಳಲ್ಲಿರುವ ಭಾಷಾ ಭಿನ್ನರಲ್ಲಿ ಐಕ್ಯಮತವನ್ನು ಪರಸ್ಪರ ಸೌಹಾರ್ದವನ್ನು ಹೆಚ್ಚಿಸುವುದಕ್ಕಾಗಿ ಉತ್ತಮೋತ್ತಮ ಉಪಾಯಗಳನ್ನು ನಿರ್ಧರಿಸುವುದು. 2) ಕನ್ನಡ ನಾಡಿನ ಬೇರೆ ಬೇರೆ ಭಾಗಗಳಲ್ಲಿ ಪ್ರಚಾರದಲ್ಲಿರುವ ಗ್ರಾಂಥಿಕ ಭಾಷೆಯನ್ನು ಒಂದೇ ರೂಪಕ್ಕೆ ತರಲು ತಕ್ಕ ಮಾರ್ಗಗಳನ್ನು ನಿಶ್ಚಯಿಸುವುದು. 3) ಕನ್ನಡವನ್ನು ಓದುವ ವಿದ್ಯಾರ್ಥಿಗಳಿಗೆ ಎಲ್ಲಾ ವಿದ್ಯಾ ಶಾಲೆಗಳಲ್ಲಿ ಪಠ್ಯಪುಸ್ತಕಗಳು ಒಂದೇ ಆಗಿರುವುದಕ್ಕೆ ಬೇಕಾದ ಪ್ರಯತ್ನಗಳನ್ನುಮಾಡುವುದು. 4) ಕನ್ನಡವನ್ನಾಡುವ ಜನಸಾಮಾನ್ಯರಲ್ಲಿ ಲೋಕ ವ್ಯವಹಾರ ಜ್ಞಾನವು ಹರಡುವಂತ ತಕ್ಕ ಪುಸ್ತಕಗಳನ್ನು ಬರೆಯಿಸಿ, ಪ್ರಚಾರ ಮಾಡುವುದಕ್ಕೆ ಸಾಧಕವಾದ ಉತ್ತಮೋತ್ತಮ ಉಪಾಯಗಳನ್ನು ನಿರ್ಣಯಿಸುವುದು. 5) ಕನ್ನಡದಲ್ಲಿ ಬರೆಯುವ ಭೌತಿಕವಾದ ನಾನಾ ಶಾಸ್ತ್ರಗಳನ್ನು ಪ್ರಯೋಗಿಸಬೇಕಾದ ಪಾರಿಭಾಷಿಕ ಶಬ್ದಗಳನ್ನು ನಿರ್ಣಯಿಸುವುದಕ್ಕೆ ತಕ್ಕ ಉತ್ತಮೋತ್ತಮ ಉಪಾಯಗಳನ್ನು ಪರಿಶೀಲಿಸುವುದು. ಮೇಲ್ಕಡ ಐದು ವಿಷಯಗಳ ಕುರಿತು ಸಲಹೆ ರೂಪದಲ್ಲಿ ಲೇಖನಗಳನ್ನು ಬರೆದು ಕಳುಹಿಸುವಂತೆ ಆಹ್ವಾನಿಸಿದರು. ಆಗ ವಿದ್ವಾಂಸರು, ಸಾಹಿತಿಗಳು ಉತ್ಸಾಹದ ಪ್ರತಿಕ್ರಿಯೆ ತೋರಿಸಿ ಅಮೂಲ್ಯವಾದ ಸಲಹೆ ಸೂಚನೆಗಳನ್ನು ಕಳುಹಿಸಿದರು. ಆಗ ಉಪಸಮಿತಿಯು ಮೇ 3 ಬೆಂಗಳೂರಿನಲ್ಲಿ ಒಂದು ಸಮ್ಮೇಳನವನ್ನು ನಡೆಸಬೇಕೆಂದು ನಿರ್ಧರಿಸಿ ಸಮ್ಮೇಳನದ ಏರ್ಪಾಡು ಮಾಡಿತು. 03.05.1915ರಂದು ಬೆಂಗಳೂರಿನ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಸಮ್ಮೇಳನ ನಡೆಯಿತು. ಸಮ್ಮೇಳನಕ್ಕೆ ಕರ್ನಾಟಕದ ನಾನಾ ಪ್ರಾಂತ್ಯಗಳಿಂದ ಪ್ರಮುಖ ವಿದ್ವಾಂಸರು ಮತ್ತು ಪತ್ರಿಕೆಗಳ ಸಂಪಾದಕರು ಆಗಮಿಸಿದ್ದರು. ನಂತರ ಸಭೆಯಲ್ಲಿ ನೆರೆದಿದ್ದ ಪತ್ರಿಕೆ ಸಂಪಾದಕರು, ವಿದ್ವಾಂಸರು ಮತ್ತು ಮಹಾಜನಗಳು ರಾಜ್ಯ ಮಂತ್ರಿ ಪ್ರವೀಣ ಹೆಚ್‌.ವಿ.ನಂಜುಂಡಯ್ಯನವರನ್ನು ಅಧ್ಯಕ್ಷರಾನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದರು. ನಂತರ ಸಮ್ಮೇಳನದಲ್ಲಿ ಈ ಕೆಳಗಿನ ಮುಖ್ಯ ಉದ್ದೇಶಗಳನ್ನು ಪ್ರಕಟಿಸಿಸಲಾಯಿತು. ಕರ್ನಾಟಕ ಭಾಷಾ ಸಂಸ್ಕರಣಕ್ಕಾಗಿ ಮತ್ತು ಕರ್ನಾಟಕ ಗ್ರಂಥಾವಳಿಯ ಅಭಿವೃದ್ಧಿಗಾಗಿ ಬೆಂಗಳೂರಿನಲ್ಲಿ ‘ಕರ್ನಾಟಕ ಸಾಹಿತ್ಯ ಪರಿಷತ್’ ಎಂಬ ಹೆಸರಿನೊಡನೆ ಪ್ರಧಾನ ಸಭೆಯಾಂದು ಸ್ಥಾಪಿತವಾಗಬೇಕು. ಮುಂಬೈ, ಮದ್ರಾಸ್‌, ಹೈದರಾಬಾದ್‌,ಕೊಡಗು ಪ್ರಾಂತ್ಯಗಳಲ್ಲಿ ಕರ್ನಾಟಕ ಸಾಹಿತ್ಯ ಪರಿಷತ್ತು ಉದಯವಾಯಿತು. ಇದರ ಉದ್ದೇಶ ಕನ್ನಡ ಭಾಷೆ, ಸಾಹಿತ್ಯ,ಕಲೆ, ಸಂಸ್ಕೃತಿ, ಇತಿಹಾಸ ಇವುಗಳ ರಕ್ಷಣೆ ಹಾಗೂ ಅಭಿವೃದ್ಧಿ ಮುಖ್ಯ ಉದ್ದೇಶವಾಗಿತು. ಪರಿಷತ್ತು ಸ್ಥಾಪನೆಯಾದಾಗಿನಿಂದ ಐದು ವರ್ಷ (1915-1920)ಗಳ ಕಾಲ ಹೆಚ್‌.ವಿ.ನಂಜುಂಡಯ್ಯನವರು ಅಧ್ಯಕ್ಷರಾಗಿ ಪರಿಷತ್ತಿನ ಮುನ್ನಡೆಗೆ ದಾರಿ ಮಾಡಿಕೊಟ್ಟರು. ಹೆಚ್‌.ವಿ.ನಂಜುಂಡಯ್ಯನವರು ಕಾಲವಾದ ನಂತರ 1947ರವರೆಗೆ ರಾಜ ಮನೆತನದವರಿಗೆ ಅಧ್ಯಕ್ಷ ಸ್ಥಾನ ಸೀಮಿತವಾಗಿತ್ತು. 12.04.1937ರಂದು ಪರಿಷತ್ತಿನ ಉಪಾಧ್ಯಕ್ಷರಾದ ಕರ್ಪೂರ ಶ್ರೀನಿವಾಸರಾಯರು ಪರಿಷತ್ತಿನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಕಟ್ಟಡ ನಿರ್ಮಾಣ ಪೂರ್ಣಗೊಂಡು 29.05.1938ರಂದು ಶ್ರೀ ಕೃಷ್ಣರಾಜ ಪರಿಷನ್ಮಂದಿರ ಉದ್ಘಾಟನೆಯಾಯಿತು. 1935 ರಲ್ಲಿ ಸಾಹಿತ್ಯ ಸಮ್ಮೇಳನದ ವೇಳಾಪಟ್ಟಿಯನ್ನು ಪ್ರಕಟಿಸಿ, ಪ್ರತಿ ವರ್ಷವು ಡಿಸೆಂಬರ್‌ ತಿಂಗಳ ಕಡೇ ವಾರದಲ್ಲಿ ಸಮ್ಮೇಳನ ನಡೆಸಬೇಕೆಂದು, ಸ್ವಾಗತ ಮಂಡಳಿ ಯೋಜನೆ, ಆಹ್ವಾನ ಸ್ವೀಕಾರ, ಅಧ್ಯಕ್ಷ ಸ್ಥಾನಕ್ಕೆ ಹೆಸರು ಸೂಚನೆ, ಸಮ್ಮೇಳನ ದಿನಾಂಕ ಗೊತ್ತುಪಡಿಸುವುದು, ಪ್ರಬಂಧಕರು, ನಿರ್ಣಯ ಸೂಚಕರು, ಉಪನ್ಯಾಸಕರು ಗೊತ್ತುಪಡಿಸುವುದು ಪ್ರಬಂಧ ಸಂಗ್ರಹಗಳು, ಸೂಚನೆಗಳ ಮುದ್ರಣ ಕಾರ್ಯಗಳ ಬಗ್ಗೆ ವೇಳಾಪಟ್ಟಿಯನ್ನು ತಯಾರು ಮಾಡಿತು. 1938ರಲ್ಲಿ ಕನ್ನಡನಾಡಿನ ನಕ್ಷೆಯಲ್ಲಿ ಪರಿಷತ್ತಿನ ಲಾಛನವನ್ನು (‘ಸಿರಿಗನ್ನಡಂ ಗೆಲ್ಗೆ, ಕನ್ನಡ ಸಾಹಿತ್ಯಪರಿಷತ್‌’) ಬಿ.ಎಂ.ಶ್ರೀಕಂಠಯ್ಯನವರು ರೂಪಿಸಿದರು. 1938 ಡಿಸೆಂಬರ್‌ ತಿಂಗಳಲ್ಲಿ ಬಳ್ಳಾರಿಯಲ್ಲಿ ನಡೆದ 23 ನೇ ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕ ಸಾಹಿತ್ಯ ಪರಿಷತ್ತು ಎಂಬ ಹೆಸರಿನ ಬದಲಿಗೆ ‘ಕನ್ನಡ ಸಾಹಿತ್ಯ ಪರಿಷತ್’ ಎಂಬ ನಾಮಕರಣಗೊಂಡಿತು. ಬಿ.ಎಂ.ಶ್ರೀಕಂಠಯ್ಯನವರು ಉಪಾಧ್ಯಕ್ಷರಾಗಿದ್ದಾಗ (1938-1942) ಪರಿಷತ್ತಿಗೆ ಭದ್ರ ಬುನಾದಿ ಹಾಕಿದರು. ಮಹಿಳಾ ಶಾಖೆ ಪರಿಷತ್ತಿನ ಮುದ್ರಣಾಲಯ, ಕನ್ನಡ ನುಡಿ ಪತ್ರಿಕೆ. ಸಾಹಿತ್ಯ ಪರೀಕ್ಷೆಗಳು, ಗ್ರಂಥ ಪ್ರಕಟಣೆ, ಮಾರಾಟ ಮತ್ತು ಬೆಳ್ಳಿ ಹಬ್ಬದ ಆಚರಣೆ ಹಾಗೂ ಕನ್ನಡದ ಬಾವುಟದ ಪ್ರಕಟಣೆಗಳ ಕಾರ್ಯಗಳೂ ಪರಿಷತ್ತಿನ ಮುನ್ನಡೆಗೆ ಸಹಾಯಕವಾದವು. ದಿನಾಂಕ 29.12.1948 ರಂದು ಕಾಸರಗೋಡಿನಲ್ಲಿ ನಡೆದ 31ನೇ ಪರಿಷತ್ತಿನ ಸಭೆಯಲ್ಲಿ ಮುಂದೆ ಉಪಾಧ್ಯಕ್ಷರ ಹುದ್ಧೆ ರದ್ದುಪಡಿಸಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೇ ಪರಿಷತ್ತಿನ ಅಧ್ಯಕ್ಷರಾಗಬೇಕೆಂದು ಜಾರಿಗೆ ತಂದರು. ದಿನಾಂಕ 24.05.1950 ರಂದು ಸೊಲ್ಲಾಪುರದಲ್ಲಿ ನಡೆದ 33ನೇ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷರ ಅವಧಿಯನ್ನು 3ವರ್ಷವೆಂದು ತೀರ್ಮಾನ ತೆಗೆದುಕೊಂಡು ಪರಿಷತ್ತು ಆದೇಶ ಹೊರಡಿಸಿತು. ಮೈಸೂರಿನ ಮುಖ್ಯಮಂತ್ರಿಗಳಾದ ಕೆಂಗಲ್‌ ಹನುಮಂತಯ್ಯನವರು ತಮ್ಮ ಸರ್ಕಾರದಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿಗಾಗಿ ಒಂದು ಇಲಾಖೆಯನ್ನು ಪ್ರಾರಂಭಿಸಿದರು. (ಈಗಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ) 1956ರ ನವೆಂಬರ್‌ 1ರಂದು ಮೈಸೂರನ್ನು ಏಕೀಕರಣಗೊಳಿಸಿದರು.‘ಕಪ್ಪು ನಾಡಿನ ನಾಡು, ಆಡುವ ಭಾಷೆ ಕನ್ನಡ ಹಾಗಾಗಿ ’ ‘ಕರ್ನಾಟಕ’ ಎಂದು ನಾಮಕರಣ ಮಾಡಬೇಕೆಂದು ದೇವರಾಜ ಅರಸ್‌ 1972ರಲ್ಲಿ ಮುಖ್ಯ ಮಂತ್ರಿಯಾದಾಗ ಶಿಫಾರಸ್ಸು ಮಾಡಿದರು. ಅದರಂತೆ ಅಂದಿನಿಂದ ‘ಕರ್ನಾಟಕ ’ ರಾಜ್ಯವಾಯಿತು. 1976 ರಲ್ಲಿ ಶಿವಮೊಗ್ಗದಲ್ಲಿ ನಡೆದ 49ನೇ ಸಾಹಿತ್ಯ ಸಮ್ಮೇಳನದಿಂದ ‘ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ’ ಎಂದು ಕರೆಯಲಾಯಿತು. 1977 ರ ಏಪ್ರಿಲ್‌ 23 ರಿಂದ 28 ರವರೆಗೆ 6 ದಿನಗಳ ಕಾಲ ವಜ್ರ ಮಹೋತ್ಸವ ಕಾರ್ಯಕ್ರಮವನ್ನು ಅನೇಕ ವೈಶಿಷ್ಟ್ಯಗಳಿಂದ ನಡೆಸಿತು. 1978ರಲ್ಲಿ 50ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಭಾರತದ ರಾಜಧಾನಿಯಾದ ನವದೆಹಲಿಯಲ್ಲಿ ನಡೆಸಿ ಕನ್ನಡದ ಇತಿಹಾಸವನ್ನು ದೇಶಕ್ಕೆ ಪಸರಿಸಿತು. ಈ ಸಮ್ಮೇಳನದ ಉದ್ಘಾಟನೆಯನ್ನು ಭಾರತದ ಆಗಿನ ಪ್ರಧಾನಮಂತ್ರಿ ಮೊರಾರ್ಜಿ ದೇಸಾಯಿ ನಡೆಸಿಕೊಟ್ಟರು. ಪರಿಷತ್ತಿನ ಅವ್ಯವಹಾರ ನಡೆದಿದೆ ಎಂಬ ವಿಷಯ ಬೆಳಕಿಗೆ ಬಂದು ಆಡಳಿತಾಧಿಕಾರಿಯನ್ನು ದಿನಾಂಕ 12.11.1987 ರಂದು ಸರ್ಕಾರ ನೇಮಿಸಿತು. ಮೂರು ವರ್ಷಗಳ ನಂತರ ಆಡಳಿತಾಧಿಕಾರಿಯನ್ನು ತೆಗೆದು ಹೊಸ ನಿಯಮದ ಪ್ರಕಾರ 2.2.1989ರಂದು ಚುನಾವಣೆ ನಡೆದು ಜಿ.ಎಸ್‌.ಸಿದ್ದಲಿಂಗಯ್ಯನವರು 17ನೇ ಪರಿಷತ್ತು ಅಧ್ಯಕ್ಷರಾದರು. 1915 ರಂದು ಒಂದು ಸಭೆ ಮುಖಾಂತರ ಪ್ರಾರಂಭವಾದ ಸಮ್ಮೇಳನ, ನಂತರ ಒಂದು ಪರಿಷತ್ತನ್ನು ಹೊಂದಿ, ಸ್ವಂತ ಕಟ್ಟಡಗಳನ್ನು ಕಟ್ಟಿಸಿಕೊಂಡು ಸರ್ಕಾರದಲ್ಲಿ ಒಂದು ಇಲಾಖೆಯನ್ನೇ ಸ್ಥಾಪಿಸಿಕೊಂಡು ಬೆಳ್ಳಿ ಹಬ್ಬ, ವಜ್ರ ಮಹೋತ್ಸವ, ಅಮೃತಮಹೋತ್ಸವ ಹಾಗೂ ಸುಮಾರು ಸಾವಿರಾರು ಪುಸ್ತಕಗಳ ಪ್ರಕಟಣೆ, ಕವಿ, ಕಾವ್ಯ, ವಿಚಾರ ಸಂಕಿರಣ, ಸಾಹಿತ್ಯ ಕಮ್ಮಟಗಳು, ಸಂಶೋಧನಾ ಕೇಂದ್ರಗಳು, ರಂಗ ಸ್ಪರ್ಧೆಗಳು, ಸಾಹಿತ್ಯ ಪರೀಕ್ಷೆಗಳನ್ನು ನಡೆಸಿಕೊಂಡು ಬರುತ್ತಾ ಇದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪರಿಷತ್ತುಗಳನ್ನು ತೆರೆದು ಜಿಲ್ಲಾ ಮಟ್ಟದ ಪರಿಷತ್ತುಗಳಿಗೆ ಜಿಲ್ಲಾ ಪಂಚಾಯ್ತಿಯಿಂದ ಹಣದ ಸಹಾಯ ನೀಡುವಂತೆ ಮಾಡಿದೆ. ಜಿಲ್ಲಾ ಮಟ್ಟದಲ್ಲಿ ಸಮ್ಮೇಳನಗಳನ್ನು ನಡೆಸುತ್ತಾ ಬರುತ್ತಿದೆ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವೈವಿಧ್ಯಮಯ ಸಾಹಿತ್ಯದ ವಿಷಯಗಳನ್ನು ಕುರಿತು ಗೋಷ್ಠಿಗಳು, ಪ್ರಬಂಧ ಮಂಡನೆ, ಚರ್ಚೆಗಳು, ಭಾಷೆ ಮತ್ತು ಸಂಸ್ಕೃತಿಗಳ ಚರ್ಚಾಕೂಟ, ಪುಸ್ತಕಗಳ ಪ್ರಕಟಣೆ ಮತ್ತು ಬಿಡುಗಡೆ, ವಿದ್ವಾಂಸರು ಸಾಹಿತಿಗಳು ಜನಪ್ರತಿನಿಧಿಗಳಿಂದ ಭಾಷೆ, ನಾಡಿನ ಬಗ್ಗೆ ಚಿಂತನೆ ನಡೆಸುತ್ತಾ ಬರುತ್ತಿದೆ. ಸಾಹಿತಿಗಳಿಗೆ, ಕವಿಗಳಿಗೆ, ಕನ್ನಡದ ಜನತೆಗೆ ಹಬ್ಬದ ವಾತಾವರಣವನ್ನು ನಿರ್ಮಿಸಿ ಜ್ಞಾನರ್ಜನೆಯನ್ನು ನೀಡುತ್ತಾ ಬಂದಿದೆ. ಖ್ಯಾತ ಸಾಹಿತಿಗಳು, ಕವಿಗಳನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಲು ಪರಿಷತ್ತು ಒಂದು ನಿಯಮವನ್ನು ಹಾಕಿಕೊಂಡು ಬರುತ್ತಿದೆ. ಪ್ರಸ್ತುತವಾಗಿ ಸದ್ಯ ಹಿರಿಯ  ನಿವೃತ್ತ ಐ.ಎ.ಎಸ್ ಅಧಿಕಾರಿ ಮ.ನು.ಬಳೆಗಾರರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಈವರೆಗೆ ಕನ್ನಡದ ಕೆಲಸ ಮಾಡಿದರು. ಬರುಬರುತ್ತ ಕನ್ನಡ ಸಾಹಿತ್ಯ ಪರಿಷತ್ತಿಗೆ ಅಸಾಹಿತಿಗಳೇ ಅಧ್ಯಕ್ಷ್ಯರಾಗುತ್ತ ಬರುವಂತಾಯಿತು. ಈಗ ಮ.ನು.ಬಳೆಗಾರರ ಅವಧಿಯೂ ಮುಗಿಯಿತು. ಸದ್ಯ ಚುನಾವಣೆ ನಡೆಯಬೇಕು ಕನ್ನಡ ಸಾಹಿತ್ಯ ಪರಿಷತ್ತಿಗೆ ಈಗ..! ಈ ವರೆಗಿನ ಅಧ್ಯಕ್ಷರು– ಅವರು ಹೀಗಿದ್ದಾರೆ–     ಶ್ರೀ ಎಚ್. ವಿ. ನಂಜುಂಡಯ್ಯ – 1915-1920     ಸರ್. ಎಂ. ಕಾಂತರಾಜ ಅರಸ್ – 1920-1923     ಶ್ರೀ ಕಂಠೀರವ ನರಸಿಂಹರಾಜ ಒಡೆಯರ್ ಬಹದ್ದೂರ್ – 1924 – 1940     ಶ್ರೀ ಜಯಚಾಮರಾಜ ಒಡೆಯರ್ ಬಹದ್ದೂರ್ – 1940-1943     ಶ್ರೀ ಬಸವಪ್ರಭು ರಾಜಾ ಲಖಮನಗೌಡ ಸರದೇಸಾಯಿ ಬಹದ್ದೂರ್ – 1941-1946     ಶ್ರೀ ಲೋಕೂರ್ ನಾರಾಯಣರಾವ್ ಸ್ವಾಮಿರಾವ್ – 8-6-1947 ರಿಂದ 29-12-1947     ಶ್ರೀ ತಿರುಮಲೆ ತಾತಾಚಾರ್ಯ ಶರ್ಮ – 29-12-1947 ರಿಂದ 6-3-1949     ಶ್ರೀ ರೆವರೆಂಡ್ ಉತ್ತಂಗಿ ಚೆನ್ನಪ್ಪ – 6-3-1949 ರಿಂದ 17-12-1950     ಶ್ರೀ ಎಂ. ಆರ್. ಶ್ರೀನಿವಾಸ ಮೂರ್ತಿ – 16-12-1950 ರಿಂದ 16-9-1953     ಡಾ. ಮಾಸ್ತಿ ವೆಂಕಟೇಶ ಅಯ್ಯಂಗಾರ್ – 30-9-1953 ರಿಂದ 9-5-1954     ಪ್ರೊ. ಎ. ಎನ್. ಮೂರ್ತಿ ರಾವ್ 9-5-1954 ರಿಂದ 17-5-1956     ಶ್ರೀ ಬಿ. ಶಿವಮೂರ್ತಿ ಶಾಸ್ತ್ರಿ – 17-5-1956 ರಿಂದ 25-10-1964     ಪ್ರೊ. ಜಿ. ವೆಂಕಟಸುಬ್ಬಯ್ಯ – 25-10-1964 ರಿಂದ 11-6-1969     ಶ್ರೀ ಜಿ. ನಾರಾಯಣ – 11-6-1969 ರಿಂದ 26-7-1978     ಡಾ. ಹಂಪ ನಾಗರಾಜಯ್ಯ – 26-7-1978 ರಿಂದ 19-2-1986     ಹೆಚ್. ಬಿ. ಜ್ವಾಲನಯ್ಯ – 19-2-1987 ರಿಂದ 1-11-1988     ಪ್ರೊ. ಜಿ. ಎಸ್. ಸಿದ್ದಲಿಂಗಯ್ಯ – 7-2-1989 ರಿಂದ 14-5-1992     ಶ್ರೀ ಗೊ. ರು. ಚನ್ನಬಸಪ್ಪ – 14-5-1992 ರಿಂದ 22-6-1995     ಡಾ. ಸಾ. ಶಿ. ಮರುಳಯ್ಯ – 22-6-1995 ರಿಂದ 10-7-1998     ಶ್ರೀ ಎನ್. ಬಸವಾರಾಧ್ಯ – 10-7-1998 ರಿಂದ 11-7-2001     ಶ್ರೀ ಹರಿಕೃಷ್ಣ ಪುನರೂರು – 11-7-2001 ರಿಂದ 2-11-2004     ಪ್ರೊ. ಚಂದ್ರಶೇಖರ ಪಾಟೀಲ (ಚಂಪಾ) – 2-11-2004 ರಿಂದ 30-4-2008     ಡಾ. ನಲ್ಲೂರು ಪ್ರಸಾದ್ ಆರ್. ಕೆ – 27-8-2008 ರಿಂದ 27-2-2012     ಶ್ರೀ ಪುಂಡಲೀಕ ಹಾಲಂಬಿ – 02-05-2012 ಪ್ರಸ್ತುತವಾಗಿ ಮ.ನು.ಬಳೆಗಾರರು  ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕೆಲಸ ಮಾಡಿದರು. ಈಗ ಇವರ ಸ್ಥಾನಕ್ಕೇ ಚುನಾವಣೆ ನಡೆಬೇಕಿದೆ… ಹೀಗೆಯೇ ನಡೆದುಕೊಂಡು ಬಂದ ಸಾಹಿತ್ಯ ಪರಿಷತ್ತು ಈಗ ರಾಜಕೀಯ

ಕನ್ನಡ ಸಾಹಿತ್ಯ ಪರಿಷತ್ತು ನಡೆದ ಬಂದ ದಾರಿ..! Read Post »

ಅಂಕಣ ಸಂಗಾತಿ, ರಹಮತ್ ತರೀಕೆರೆ ಬರೆಯುತ್ತಾರೆ

ಮನೆಖರೀದಿ ಪತ್ರ 2009ನೇ ಇಸವಿ. ಹೆಸರಾಂತ ರಿವಾಯತ್ ಗಾಯಕರಾದ ಕದರಮಂಡಲಗಿ ಅಲ್ಲಾಬಕ್ಷರ ಭೇಟಿ ಮುಗಿಸಿಕೊಂಡು, ಬ್ಯಾಡಗಿಯಿಂದ ಹಂಪಿಗೆ ಹಿಂತಿರುಗುತ್ತಿದ್ದೆ. ದಾರಿಯಲ್ಲಿ ಬಳ್ಳಾರಿ ಜಿಲ್ಲೆ ಪ್ರವೇಶಿಸುವಾಗ ಹಾವೇರಿ ಜಿಲ್ಲೆಯ ಕೊನೆಯ ಊರು ಗುತ್ತಲ ಸಿಕ್ಕಿತು. ಅಲ್ಲೊಬ್ಬ ಗಾಯಕ ಇದ್ದಾನೆಂದು ತಿಳಿದು ಹುಡುಕಿಕೊಂಡು ಹೊರಟೆ. ಹೆಸರು ಗೌಸ್‍ಸಾಬ್ ಹಾಲಗಿ. ಗೌಸ್‍ಸಾಬರು ಮನೆಯೊಂದರ ಜಗುಲಿಕಟ್ಟೆಯ ಮೇಲೆ ಕುಳಿತು ಮನೆಖರೀದಿ ಪತ್ರ ಬರೆಯುತ್ತಿದ್ದರು. ಈ ಕೆಲಸಕ್ಕೆ ರೆವಿನ್ಯೊ ಇಲಾಖೆಯಲ್ಲಿ `ಬಿಕ್ಕಲಂ’ ಎನ್ನುವರು. ಪ್ರಾಮಿಸರಿ ನೋಟಿನ ಬರೆಹ ಮುಗಿದ ಬಳಿಕ ಅವರಿಂದ ರಿವಾಯತ್ ಹಾಡನ್ನೂ ಕಿತ್ತೂರ ಚೆನ್ನಮ್ಮನ ಲಾವಣಿಯನ್ನೂ ಆಲಿಸಿದೆ. ಅವರು ಬರೆದ ಪತ್ರದ ಕನ್ನಡ ವಿಶಿಷ್ಟವಾಗಿತ್ತು. ಅದರ ಕೊನೆಯ ಭಾಗ ಹೀಗಿತ್ತು: “ಕೆಂಪು ಹಂಚಿನಮನೆ, ನನ್ನ ಖಬ್ಜೀಲೆ ಖಾತೆ ವ ವಹಿವಾಟು ಇದ್ದು, ಈಗ ನಮ್ಮ ಗೃಹಬಳಕೆಯ ಸಾಲಕೊಡಲಿಕ್ಕೆ ಅವಶ್ಯ ರಖಮ್ ಬೇಕಾಗಿದ್ದರಿಂದ ಈ ಮೇಲ್ಕಂಡ ಕೆಂಪು ಹಂಚಿನಮನೆ ವ್ಯಾಪಾರಕ್ಕೆ ಹಚ್ಚಲು ನೀವು ಈಗಿನ ಬಜಾರ್ ಭಾವದ ಪ್ರಕಾರ, ಯೋಗ್ಯ ಬೆಲೆಯಾದ ಪೂರಾ ಮನೆಗೆ ಎಪ್ಪತ್ತಾರು ಸಾವಿರ ರೂಪಾಯಿಗಳಿಗೆ ಖಂಡಮೊತ್ತ ಖರೀದಿಗೆ ಕೇಳಿದ್ದರಿಂದ, ನಿಮ್ಮ ಬೆಲಿಯು ಯೋಗ್ಯ ಹೆಚ್ಚಿದ್ದರಿಂದ, ನಾನು ಮನಸಾರೆ ಒಪ್ಪಿಕೊಂಡು ನಿಮಗೆ ತಕ್ಕ ಖರೀದಿಗೆ ಕೊಟ್ಟು, ಈ ದಿವಸ ನಿಮ್ಮ ಕಡೆಯಿಂದ ಕೆಳಗೆ ಸಹಿ ಮಾಡಿದ ಸಾಕ್ಷೀದಾರರ ಸಮಕ್ಷಮ, ಸಂಚಗಾರವಾಗಿ 36000 ರೂಪಾಯಿಗಳನ್ನು ಚುಕ್ತ ಪಡೆದುಕೊಂಡಿರುತ್ತೇನೆ. ಬಾಕಿ ಉಳಿದ ರಕಂ ನೀವು ಕರದಾಗ ಬಂದು ಹಾವೇರಿ ಸಬರಿಜಿಸ್ಟ್ರಾರ ಸಾಹೇಬರ ಸಮಕ್ಷಮ ಚುಕ್ತ ಎಣಿಸಿಕೊಂಡು ನಿಮದೇ ಖರ್ಚಿನಿಂದ ನೋಂದ ಮಾಡಿಸಿಕೊಡುತ್ತೇನೆ. ಮನೆ ಕಬಜಾ ಇವತ್ತಿನಿಂದಲೇ ನಿಮ ಕಬಜಾ ಕೊಟ್ಟಿರುತ್ತೇನೆ. ನೀವು ನಿಮ್ಮ ಮರ್ಜಿ ಪ್ರಕಾರ ವಹಿವಾಟು ಉಪಭೋಗ ಮಾಡಿಕೊಳ್ಳತಕ್ಕದ್ದು. ಈ ವ್ಯವಹಾರದಲ್ಲಿ ನನ ಕಡಿಂದಾಗಲಿ ನನ ವಾರಸಾ ಕಡಿಂದಾಗಲಿ, ತಂಟೆ ತಕರಾರು ಬಂದು ಮನೆ ಕಬಜಾ ತಪ್ಪಿ ನಿಮಗೆ ಲುಕ್ಸಾನ್ ಸಂಭವಿಸಿದಲ್ಲಿ, ನಾನು ನನ್ನ ಜಾತಿನಿಷೆಯಿಂದ ಲುಕ್ಸಾನ್ ಭರಾಯಿಸಿ ಕೊಡುತ್ತೇನೆ ಅಂತ ಆತ್ಮಸಂತೋಷದಿಂದ ವ ಅಕ್ಕಲ ಹುಶಾರಿಯಿಂದ ಬರದುಕೊಟ್ಟ ಹಂಚಿನಮನೆ ಖರೀದಿ ಒಪ್ಪಂದ ಪತ್ರವು.’’ ಪತ್ರದ ಭಾಷೆಯಲ್ಲಿ ಮರಾಠಿ ಕನ್ನಡ ಫಾರಸಿ ಇಂಗ್ಲೀಶು ಎಲ್ಲ ಮಿಶ್ರವಾಗಿವೆ. ಈ ಸಂಕರಭಾಷೆಯ ಹಿಂದೆ ಫಾರಸಿಯನ್ನು ಆಡಳಿತ ಭಾಷೆಯಾಗಿಸಿಕೊಂಡಿದ್ದ ಮೊಗಲರು ಮತ್ತು ಬಿಜಾಪುರದ ಆದಿಲಶಾಹಿಗಳು; ಮರಾಠಿ ಮತ್ತು ಫಾರಸಿಯನ್ನು ಬಳಸುತ್ತಿದ್ದ ಪೇಶ್ವೆಗಳೇ ಮೊದಲಾಗಿ ಮರಾಠಿ ಸಂಸ್ಥಾನಿಕರು; ಇಂಗ್ಲೀಶ್ ಆಡಳಿತ ಭಾಷೆಯಾಗಿಸಿಕೊಂಡಿದ್ದ ಮುಂಬೈ ಪ್ರಾಂತ್ಯದ ಬ್ರಿಟಿಶರು; ಕನ್ನಡ ಆಡಳಿತ ಭಾಷೆಯಾಗಿಸಿಕೊಂಡಿರುವ ಸದ್ಯದ ಕರ್ನಾಟಕ ಸರ್ಕಾರ-ಈ ಎಲ್ಲರ ಆಳಿಕೆಯ ಚಾರಿತ್ರಿಕ ಹಿನ್ನೆಲೆಯಿದೆ. ಹಲವು ಆಡಳಿತ ಪದ್ಧತಿಗಳು ಕೂಡಿ ಹುಟ್ಟಿಸಿರುವ ಕನ್ನಡವಿದು. ಬೆಳಗಾವಿ ಬಳ್ಳಾರಿ ಗುಲಬರ್ಗ ಮಂಗಳೂರು ಮೈಸೂರು ಭಾಗಗಳಲ್ಲಿರುವ ಇಂತಹ ಖರೀದಿ ಪತ್ರಗಳ ಜತೆಗಿಟ್ಟು ನೋಡಿದರೆ, ಇದರ ವಿಶಿಷ್ಟತೆ ಮತ್ತಷ್ಟು ಸ್ಪಷ್ಟವಾದೀತು. ಇದನ್ನು ನೋಡುವಾಗ, ಕರ್ನಾಟಕದ ಬೇರೆಬೇರೆ ಆಡಳಿತಗಾರರು ರೂಢಿಸಿದ್ದ ಕನ್ನಡಗಳು ನೆನಪಾಗುತ್ತವೆ. ಹೈದರ್ ಟಿಪ್ಪು ಪೂರ್ಣಯ್ಯ ಮುಂತಾದವರು ಬರೆಸಿದ ಪತ್ರ ಹಾಗೂ ಹೊರಡಿಸಿದ ಫರ್ಮಾನುಗಳು ನೆನಪಾಗುತ್ತವೆ; ನಲ್ಲಪ್ಪ ಶೆಟ್ಟಿ ವಿರಚಿತ ಹೈದರಾಲಿಯ ಜೀವನಚರಿತ್ರೆ `ಹೈದರ್‍ನಾಮಾ’ದ ಕನ್ನಡವು ಇನ್ನೂ ಅನನ್ಯ. ಶ್ರೀರಂಗಪಟ್ಟಣದ ಖಾಜಿಯಾಗಿದ್ದ ಮಿಸ್‍ಕಿನ್ ನಸೀರುದ್ದೀನನ `ಜಂಗನಾಮಾ’ದ ಕನ್ನಡ ಇನ್ನೊಂದು ಬಗೆಯಾಗಿದೆ. ಶೃಂಗೇರಿ ಮಠದ ಕಡತಗಳಲ್ಲಿಯೂ 19ನೇ ಶತಮಾನದ ವ್ಯಾವಹಾರಿಕ ಕನ್ನಡವಿದೆ. ಮೈಸೂರು ರಾಜ್ಯದಲ್ಲಿ ಬ್ರಿಟಿಶರ ಕಾಲದಲ್ಲಿ ರೆವಿನ್ಯೂ ಅಧಿಕಾರಿಯಾಗಿದ್ದ ನವರತ್ನ ರಾಮರಾಯರು ಬರೆದ ಆತ್ಮಕಥೆಯ ಗದ್ಯ ಕೂಡ ಇಂತಹ ಫಾರಸಿ ಮಿಶ್ರಿತ ಕಸುವುಳ್ಳದ್ದು. ಮುಂಬೈ ಪ್ರಾಂತ್ಯದಲ್ಲಿ ದೊಡ್ಡ ಅಧಿಕಾರಿಯಾಗಿದ್ದ ಅರಟಾಳ ರುದ್ರಗೌಡರು ಬರೆಯಿಸಿದ ತಮ್ಮ ಆತ್ಮಚರಿತ್ರೆಯಲ್ಲಿ ಬಳಕೆಯಾಗಿರುವ ಕನ್ನಡವು ಮರಾಠಿ ಮಿಶ್ರಣದಿಂದ ಕೂಡಿದೆ. ಕನ್ನಡ ಗದ್ಯಕ್ಕೆ ಕುವೆಂಪು ಸಂಸ್ಕøತ ಬೆರೆಸುತ್ತ ಒಂದು ಖದರನ್ನು ಒದಗಿಸಿದರೆ, ಗೋವಿಂದ ಪೈಗಳು, ಹಳಗನ್ನಡ ರೂಪಗಳನ್ನು ಬಳಸುತ್ತ ಇನ್ನೊಂದು ಚಹರೆ ಕಟ್ಟಿಕೊಟ್ಟರು. ಹೀಗೆ ಕನ್ನಡವು ಬೇರೆಬೇರೆ ವೃತ್ತಿಕ್ಷೇತ್ರಗಳಲ್ಲಿ ಬಳಕೆಯಾಗುತ್ತ ರೂಪವೈವಿಧ್ಯ ಪಡೆದುಕೊಂಡಿದೆ. ಅದು ತನಗೆ ಅಗತ್ಯವಾದ ಶಬ್ದಗಳನ್ನು ಕಾಲಕಾಲಕ್ಕೆ ಬೇರೆಬೇರೆ ಭಾಷೆಗಳಿಂದ ಪಡೆದುಕೊಂಡು ಸಮೃದ್ಧವಾಗಿದೆ. ಆ ಶಬ್ದಗಳನ್ನು ಹೊರಹಾಕಿ ಅಚ್ಚಗನ್ನಡ ಉಳಿಸಿಕೊಳ್ಳುವುದು ಕನ್ನಡಪರ ಕೆಲಸ ಎಂದು ಕೆಲವರು ಭಾವಿಸಿದ್ದಾರೆ; ಎಗ್ಗಿಲ್ಲದ ಸ್ವೀಕಾರ ನಡೆಯಲಿ ಏನಾಗುತ್ತೆ ಎನ್ನುವ ನಿಶ್ಚಿಂತವಾದಿಗಳೂ ಉಂಟು. ಯಾವುದೇ ಸ್ವೀಕಾರ-ನಿರಾಕರಣೆಗಳಿಗೆ, ಅದು ಒಂದು ಭಾಷೆ ಮತ್ತು ಭಾಷಿಕರ ಮೂಲಶಕ್ತಿಯನ್ನು ಹಿಗ್ಗಿಸಿದೆಯೊ ಕುಗ್ಗಿಸಿದೆಯೊ ಎಂಬುದೇ ಮಾನದಂಡ. ಕನ್ನಡವು ಮೊದಲಿಂದಲೂ ಅತಿರೇಕಗಳನ್ನು ನಿರಾಕರಿಸಿದೆ. ಪಂಪನ `ದೇಸಿಯೊಳ್ ಪೊಕ್ಕು ಮಾರ್ಗದೊಳೆ ತಳ್ವುದು’ ಕೇವಲ ಕಾವ್ಯಕ್ಕೆ ಮಾತ್ರವಲ್ಲ, ಭಾಷೆಗೂ, ಜೀವನ ವಿಧಾನಕ್ಕೂ ಅನ್ವಯವಾಗುವ ಸಮತೋಲನ ವಿಧಾನವಾಗಿದೆ. ನಮ್ಮ ನಾಡಿನ ಸಾಂಸ್ಕøತಿಕ ಸಮೃದ್ಧಿಯಂತೂ ಈ ಕೊಡುಕೊಳೆಯ ವಿವೇಕದಿಂದಲೇ ಸಂಭವಿಸಿದೆ.ಯೂರೋಪಿನಿಂದ ಬಂದ ಹಾರ್ಮೊನಿಯಂ, ವೈಯಲಿನ್, ಅರಬಸ್ಥಾನದಿಂದ ಬಂದ ದಫ್ (ಡಪ್ಪು) ನಮ್ಮ ಸಂಗೀತ-ರಂಗಭೂಮಿಗಳಲ್ಲಿ ಸೇರಿಹೋಗಿರುವ ಬಗೆಯನ್ನು ಗಮನಿಸಬೇಕು.ಕನ್ನಡ ಗದ್ಯಕ್ಕಿರುವ ಅನಂತ ಮಗ್ಗುಲುಗಳನ್ನು ಗಮನಿಸುವಾಗ ಸೋಜಿಗವಾಗುತ್ತದೆ. ಮಾತ್ರವಲ್ಲ, ಪತ್ರಿಕೆಗಳಲ್ಲಿ ನಮ್ಮ ಬರೆಹಗಳಲ್ಲಿ ನಾವು ಬಳಸುತ್ತಿರುವ ಗದ್ಯ ಎಷ್ಟೊಂದು ನಿಸ್ಸತ್ವವಾಗಿದೆ ಎಂದು ದುಗುಡವೂ ಆವರಿಸುತ್ತದೆ. ಜನರಾಡುವ ಮಾತುಗಳನ್ನು ಆಲಿಸದೆ ಹೊಸಭಾಷೆಯನ್ನು ಲೇಖಕರು ಕೇವಲ ಸ್ವಪ್ರತಿಭೆಯೊಂದರಿಂದಲೇ ಹುಟ್ಟಿಸಲಾರರು. ಹುಟ್ಟಿಸಿದರೂ ಅದಕ್ಕೆ ನೆಲದ ಕಸುವು ಇರುವುದಿಲ್ಲ. ಭಾಷೆಯ ಬೆಳವಣಿಗೆ ಎಂದರೇನು? ಬೋರ್ಡು ಬ್ಯಾನರುಗಳಲ್ಲಿ ಬಳಕೆಯಾಗುವುದೇ? ಅದು ಬಳಕೆಯ ಒಂದು ಹೊರ ಮತ್ತು ಸರಳ ಮುಖವಷ್ಟೆ. ಭಾಷೆಗೆ ದೈನಿಕ ಬದುಕಿನ ಮಾತುಕತೆಯಲ್ಲಿ ವ್ಯವಹಾರದಲ್ಲಿ ಬಳಕೆಯಾಗುವ ಹಲವಾರು ಸ್ತರಗಳಿವೆ. ಶಿಕ್ಷಣ ಮತ್ತು ಆಡಳಿತದಲ್ಲಿ ಬಳಕೆಯಾಗುವ ಸ್ತರಗಳಿವೆ. ಇವುಗಳ ಜತೆಗೆ ಗಹನವಾದ ವಿಚಾರಗಳನ್ನು ಅಭಿವ್ಯಕ್ತಿ ಮಾಡಲು ಸಾಧ್ಯವಾಗುವಂತೆ, ಧಾರಣಶಕ್ತಿಯನ್ನು ಪಡೆಯುವ ಸ್ತರವೂ ಇದೆ. ಇದನ್ನು 12ನೇ ಶತಮಾನದಲ್ಲಿ ಶರಣರು ತಾತ್ವಿಕವಾದ ವಾಗ್ವಾದಕ್ಕೆ ಕನ್ನಡವನ್ನು ಬಳಸುವ ಮೂಲಕ ಮಾಡಿದರು. ನೋಡಲು ಸರಳವಾಗಿ ಕಾಣುವ ಆದರೆ ದಾರ್ಶನಿಕ ಅರ್ಥಗಳಿಂದ ತುಂಬಿದ ಅಲ್ಲಮನ ವಚನಗಳ ಕನ್ನಡ ಒಂದು ಅದ್ಭುತ. ಭಾಷೆಗೆ ಧಾರಣ ಶಕ್ತಿ ಮಾತ್ರವಲ್ಲ, ಅನುಭವ-ವಿಚಾರಗಳನ್ನು ರೂಪಕ ಪ್ರತಿಮೆ ನುಡಿಗಟ್ಟುಗಳಲ್ಲಿ ಹೇಳುವಂತೆ ಸೌಂದರ್ಯಾತ್ಮಕ ಸ್ತರವೂ ಬೇಕು. ಈ ಸ್ತರವು ಹಳ್ಳಿಗಳಲ್ಲಿ ಅತ್ಯಂತ ಚತುರ ಮಾತುಗಾರರು ಆಡುವ ಭಾಷೆ ಕಂಡರೂ ಗೊತ್ತಾಗುತ್ತದೆ. ಇದು ಪಂಪನ ಕಾವ್ಯ, ಬೇಂದ್ರೆಯವರ ಪದ್ಯ, ಕುವೆಂಪು ಕಾದಂಬರಿಗಳ ಗದ್ಯ ನೋಡಿದರೆ ಅರಿವಾಗುತ್ತದೆ. ನಾಗೇಶ್ ಹೆಗಡೆ, ಚನ್ನೇಶ್ ಮುಂತಾದವರು ಬರೆಯುವ ವಿಜ್ಞಾನದ ಬರೆಹಗಳು ಅವುಗಳ ಭಾಷೆ ಈ ಕಾರಣಕ್ಕೇ ಮಹತ್ವದವಾಗಿವೆ.ಯಾವುದೇ ಜನ ಭಾಷೆಗೆ ಆಂತರಿಕವಾದ ಸ್ತರಸಂಪತ್ತು ಮತ್ತು ಕಸುವುಗಳಿದ್ದರೆ ಸಾಲದು. ಅದು ಬಳಕೆಯಾಗುವ ವಿಪುಲ ಮತ್ತು ಸವಾಲಿನ ಅವಕಾಶಗಳೂ ನಿರ್ಮಾಣವಾಗಬೇಕು. ಇಲ್ಲವಾದರೆ, ಕುಸ್ತಿ ಪಂದ್ಯಗಳಿಲ್ಲದೆ ದೃಢದೇಹ ಸಾಕಿಕೊಂಡ ಪೈಲ್ವಾನನಂತೆ. ವೈರುಧ್ಯವೆಂದರೆ, ದಿನಗಳೆದಂತೆ ಕೋರ್ಟು, ವೈದ್ಯ, ಇಂಜಿನಿಯರಿಂಗ್, ವಿಜ್ಞಾನಗಳಲ್ಲಿ ಕನ್ನಡ ಬಳಕೆಯ ಅವಕಾಶಗಳು ಕ್ಷೀಣಿಸುತ್ತಲೇ ಹೋಗುತ್ತಿವೆ. ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿ ಬಂದಿವೆಯೆಂದು ನಾವು ಬೀಗುತ್ತಲೇ ಇದ್ದೇವೆ. ************************************ ರಹಮತ್ ತರಿಕೆರೆಯವರು- ಕನ್ನಡದ ಗಮನಾರ್ಹ ಲೇಖಕ. ಹಂಪಿ ವಿಶ್ವವಿದ್ಯಾಲಯದ ಪ್ರೋಫೆಸರ್. ನಾಡಿನ ಸಂಸ್ಕೃತಿ, ಸೌಹಾರ್ದತೆಯ ಬೇರುಗಳ ಜಾಡು ಹಿಡಿದು, ಆಯಾ ಊರುಗಳಿಗೆ ಹೋಗಿ, ಮಾಹಿತಿ ಹಾಕಿ, ಅಲ್ಲಿನ ಜನರ ಜೊತೆ ಬೆರೆತು, ಸಂಶೋಧನಾ ಲೇಖನಗಳನ್ನು ಬರೆದವರು.‌ಕರ್ನಾಟಕದ ಸಂಗೀತಗಾರರು ಹಾಗೂ ಅವರು ದೇಶದ ಇತರೆ ಭಾಗಗಳಲ್ಲಿ ನೆಲೆಸಿದವರ ಬಗ್ಗೆ ಹುಡುಕಾಡಿ ಬರೆದವರು. ಅವರ ನಿರೂಪಣಾ ಶೈಲಿ ಅತ್ಯಂತ ಆಕರ್ಷಕ. ಮನಮುಟ್ಟುವಂತೆ ಬರೆಯುವ ರಹಮತ್ ತರೀಕೆರೆ ಕನ್ನಡದ ,ಬಹುತ್ವದ ,ಸೌಹಾರ್ದತೆಯ ಪ್ರತೀಕವೂ ಆಗಿದ್ದಾರೆ

Read Post »

ಇತರೆ

ಶ್ವಾನೋಪಾಖ್ಯಾನ

ಹಾಸ್ಯ ಲೇಖನ ಶ್ವಾನೋಪಾಖ್ಯಾನ ಚಂದಕಚರ್ಲ ರಮೇಶ ಬಾಬು ನಮಗೆಲ್ಲಾ ಗೊತ್ತಿರುವ ಹಾಗೆ ನಾಯಿಗಳು ಅಥವಾ ಮರ್ಯಾದೆಪೂರ್ವಕವಾಗಿ ಕರೆಯುವುದಾದರೇ ಶುನಕಗಳು ಅಥವಾ ಶ್ವಾನಗಳು, ನಮ್ಮ ಸಮಾಜದ ಗಣ್ಯ ಜೀವಿಗಳಾಗಿವೆ.  ನಾನು ಮುಂಚಿನಿಂದಾ ಮನೆಯಲ್ಲಿ ನಾಯಿ ಸಾಕಾಣಿಕೆಯ ವ್ಯತಿರೇಕಿ.   ಬಹುಶ ನನ್ನ ಬಾಲ್ಯದಲ್ಲಿ ನನ್ನನ್ನಟ್ಟಿಸಿಕೊಂಡು ಬಂದ ನಾಯಿ ಅದಕ್ಕೆ ಕಾರಣವಿರಬಹುದು. ಅದು ಹಿಂದೆ ಬೀಳಲು ಕಾರಣ ನಾನು ಅದರ ಬಾಲ ತುಳಿದದ್ದು ಅಂತ ಹೇಳಿದ್ರೇ ಈ ನನ್ನ ನಿಲುವು ಸ್ವಲ್ಪ ಸಡಿಲವಾಗುತ್ತದೆ ಅಂತ ಮುಂಚೆನೇ ಹೇಳಲಿಲ್ಲ ಅಂತಿಟ್ಕೊಳ್ಳಿ. ಅದು ಬೇರೇ ಮಾತು. ನನ್ನ ಹೆಂಡತಿಗಂತೂ ನಾಯಿ ಸಾಕುವುದು ಒಂದು ನೋವಿನ ಅನುಭವ. ಅವಳ ತವರು ಮನೆಯಲ್ಲಿ ಅವರೆಲ್ಲಾ ಇಷ್ಟ ಪಟ್ಟು ಬೆಳೆಸಿದ ನಾಯಿ ಅದರ ಆಯುಷ ತೀರಿ ಸತ್ತು ಹೋಯಿತು. ಮನೆಯವರಿಗೆಲ್ಲಾ ಯಾರೋ ಆತ್ಮೀಯರನ್ನ ಕಳೆದುಕೊಂಡ ನೋವು. ಹಾಗಾಗಿ ಇವಳಿಗೆ ಒಂಥರಾ ವೈರಾಗ್ಯ. ತಂದು ಸಾಕಿಕೊಳ್ಳುವುದೇಕೆ, ಸತ್ತಾಗ ಮಿಡುಕುವುದೇಕೆ ? ಎನ್ನುವ ನಿರ್ವೇದ ಭಾವ. ಹಾಗಾಗಿ ಒಮ್ಮೆ ನಮಗೆ ಅದೆಷ್ಟು ನಾಯಿ ಸಾಕಿಕೊಳ್ಳುವ ಅಗತ್ಯ ಬಂದಿದ್ದರೂ ಸಾಕಲಿಲ್ಲ. ಅದಕ್ಕೆ ಕೈ ಹಾಕಲಿಲ್ಲ ನಾಯಿಗಳಲ್ಲಿ ಊರನಾಯಿಗಳು ಮತ್ತು ಕಾಡುನಾಯಿಗಳು ಎಂಬ ಪ್ರಭೇದಗಳಿದ್ದರೂ ಕಾಡುನಾಯಿಗಳು ನಮ್ಮ ನಡುವೆ ನಿವಸಿಸುವುದಿಲ್ಲ ವಾದ್ದರಿಂದ ಅವುಗಳನ್ನ ಈ ಲೇಖನದ ವ್ಯಾಪ್ತಿಗೆ ತೊಗೊಂಡಿಲ್ಲ.  ಊರ ನಾಯಿಗಳಲ್ಲಿ ಮತ್ತೆ ಸಿಗುವ ಪ್ರಭೇದಗಳೆಂದರೇ ಸಾಕು ನಾಯಿ ಮತ್ತು ಬೀದಿ ನಾಯಿ. ಸಾಕುನಾಯಿ ಯಾರಾದರೂ ಮನೆಯ ನಾಯಿ ಯಾಗಿರುತ್ತದೆ. ಅದರ ದೇಖರೇಖೆಗಳನ್ನ ಅದರ ಯಜಮಾನ ವಹಿಸಿಕೊಳ್ಳುತ್ತಾನೆ. ಅದು ಸ್ವಲ್ಪ ಮಟ್ಟಿಗೆ ಶಿಸ್ತಿನ ನಾಯಿ ಎನ್ನಬಹುದು. ಇದು ಕಚ್ಚುವುದಿಲ್ಲವಾ ಎಂದು ಕೇಳಬೇಡಿ. ನಮ್ಮನ್ನಾಳಿದ ಬಿಳಿಯರ ಗಾದೆ “ ಬಾರ್ಕಿಂಗ್ ಡಾಗ್ಸ್ ಸೆಲ್ಡಂ ಬೈಟ್ “ ಎನ್ನುತ್ತಾ ಅವುಗಳಿಗೆ ಬೆನಿಫಿಟ್ ಆಫ್ ಡೌಟ್ ಕೊಟ್ಟರೂ ನಮ್ಮವರು ಮಾತ್ರ “ಬೊಗಳುವ ನಾಯಿ ಕಚ್ಚುವುದಿಲ್ಲ “ ಅಂತ ಸಾರಿದ್ದಾರೆ. ಹಾಗೆ ಅಂತ ನೀವು ಬೊಗಳಿದ ನಾಯಿಗಳ ಮೇಲೆ ಕಚ್ಚುತ್ತದೋ ಇಲ್ಲವೋ ಪ್ರಯೋಗ ಮಾಡಬೇಕಾಗಿಲ್ಲ.  ನಾಯಿಯ ಸಹಜ ಗುಣವೇ ಕಚ್ಚುವುದು. ಆದಕಾರಣ ಇದು ಸಹ ಕಚ್ಚುತ್ತದೆ. ಕೆಣಕಿದರೆ ಮಾತ್ರ ಅಂತ ಅದರ ಒಡೆಯನ ಒಕ್ಕಣೆಯಾದರೂ ಅವರ ಹೇಳಿಕೆಯಲ್ಲಿ ಪೂರಾ ನಂಬಿಕೆ ಇಡಲಾಗುವುದಿಲ್ಲ. ಅದು ಸಹ ಕಚ್ಚುತ್ತದೆಯಾದ ಕಾರಣ ಮನೆಯ ಹೊರಗಡೆ ಫಲಕ ನೇತಾಡುತ್ತಿರುತ್ತದೆ,”ನಾಯಿ/ನಾಯಿಗಳಿವೆ ಎಚ್ಚರಿಕೆ “ ಅಂತ.  ನೀವು ಆಗ ಅವರ ಮನೆಯೊಳಗೆ ಕಾಲಿಡುವಾಗ ತುಂಬಾ ಎಚ್ಚರ ವಹಿಸುತ್ತೀರಿ. ಅದನ್ನು ಕಟ್ಟಿಹಾಕಿದಾರೆ ಅಂತ ಗೊತ್ತಾದರೇ ಮಾತ್ರ ನೀವು ಒಳಗಡೆ ಹೋಗುವ ಸಾಹಸ ಮಾಡುತ್ತೀರಿ. ಎಲ್ಲ ನಾಯಿಗಳಿಗೂ ಅವುಗಳ ಏರಿಯಾ ಇರುತ್ತದಂತೆ. ಅದು ದಾಟಿ ಯಾರು ಬಂದರೂಅವು ಸಹಿಸುವುದಿಲ್ಲ. ಈ ಸಾಕುನಾಯಿಯ ಏರಿಯಾ ಮನೆ. ಆದ ಕಾರಣ ಅದರ ಏರಿಯಾದ ಒಳಗೆ ಬಂದರೇ ಅದು ಒಮ್ಮೆ ಬೊಗುಳುವುದರ ಮೂಲಕ ನಿಮಗೆ ಎಚ್ಚರಿಕೆ ನೀಡುತ್ತದೆ, ತೊಲಗು ಅಂತ. ಅಷ್ಟರಲ್ಲಿ ಅದರ ಒಡೆಯ ಅಥವಾ ಒಡತಿ ಅದರ ಹೆಸರು ಕರೆದು, ಬರುವವರು ನಮ್ಮವರೇ ಎಂದ ಮೇಲೆ ಮಾತ್ರ, ನಿಮ್ಮ ಕಡೆ ಅದೇನೋ ಸಂಶಯದ ನೋಟದೊಂದಿಗೆ ಗುರ್ರೆನ್ನುತ್ತಾ ಒಳಗೆ ಹೋಗಲು ಬಿಡುತ್ತದೆ. ಈ ಅನುಭವ ಬಹುಶಾ ಎಲ್ಲರಿಗೂ ಒಮ್ಮೆಯಾದರೂ ಆಗಿರುತ್ತದೆ. ನೀವು ನಿಮ್ಮ ಮನೆಯಲ್ಲಿ ನಾಯಿ ಸಾಕಿದರೂ ಬೇರೇಯವರ ಮನೆ ನಾಯಿ ನಿಮ್ಮ ಅನುಭವವನ್ನು ಪರಿಗಣಿಸುವುದಿಲ್ಲ ಮತ್ತೆ ಅದರದೇ ಸೋದರನ/ಸೋದರಿಯ ಪೋಷಣೆ ಮಾಡುತ್ತಿರುವ ನಿಮ್ಮ ಬಗ್ಗೆ ಕೃತಜ್ಞತೆಯೂ ತೋರುವುದಿಲ್ಲ. ಅದಕ್ಕೆ ಅದರ ಏರಿಯಾ ಮತ್ತು ಒಡೆಯ ಮಾತ್ರ ಮುಖ್ಯ. ತುಂಬಾ ಜನರಿಗೆ ನಾಯಿ ಇರುವ ಮನೆಗಳಿಗೆ ಹೋದಾಗ ಮೆಲಕು ಹಾಕಿಕೊಳ್ಳುವ ಅನುಭವಗಳಿರುತ್ತವೆ. ನನಗಂತೂ ಒಮ್ಮೆ ಒಬ್ಬ ತಿಳಿದವರ ಮನೆಗೆ ಊಟಕ್ಕೆ ಹೋಗ ಬೇಕಾಗಿತ್ತು. ಅವರ ಹೇಳಿಕೆ ಮೇರೆಗೆ ಅಂತಿಟ್ಟುಕೊಳ್ಳಿ. ನಾನು ನನ್ನ ಕುಟುಂಬದ ಸದಸ್ಯರು ಅವರ ಮನೆಗೆ ಹೋಗಿ ಸೋಫಾದ ಮೇಲೆ ಕೂತ ತಕ್ಷಣ ಒಂದು ದೈತ್ಯಾಕಾರದ ನಾಯಿ ಒಳಗಿಂದ ಬಂದು ನನ್ನ ಭುಜಗಳಮೇಲೆ ಅದರ ಮುಂಗಾಲು ಹಾಕಿ ನಿಂತೇಬಿಟ್ಟಿತು. ನನ್ನ ಹೆಂಡತಿ ಮತ್ತು ಮಕ್ಕಳು ಹೆದರಿ, ಚೀರಿ,ದೂರ ಸರಿದು ಹೋದರು. ಅದು ಏನೂ ಮಾಡಲಿಲ್ಲ. ಬಹುಶ ಅದು ನನ್ನ ಪರಿಚಯ ಮಾಡಿಕೊಳ್ಳುತ್ತಿತ್ತೋ ಏನೋ. ಆದರೇ ಅದರ ಈ ಪರಿಯ ಆಕ್ರಾಮಿಕ ಭಂಗಿ ನನಗೆ ಗೊತ್ತಾಗುವುದಾದರೂ ಹೇಗೆ ? ನಾನು ಮಿಸುಕಾಡಲಿಲ್ಲ. ಏನು ಮಿಸುಕಿದರೇ ಏನು ಪ್ರಮಾದವೋ  ಯಾರಿಗ್ಗೊತ್ತು. ನನ್ನ ಮಿತ್ರರು ನಗುತ್ತಾ “ ಏನೂ ಮಾಡುವುದಿಲ್ಲ ಅದು ! ತುಂಬಾ ಸಾಧು. “ ಎನ್ನುತ್ತಾ ಅದರ ಹೆಸರು ಹಿಡಿದು ಕರೆದ ತಕ್ಷಣ ನನ್ನ ಮೇಲಿನ ಕಾಲುಗಳು ಕಿತ್ತುಕೊಂಡು ಅವರ ಹತ್ತಿರ ಹೋಯಿತು. ತುಂಬಾ ಸಾಧು ಅಂತ ಅವರಗ್ಗೊತ್ತು. ನನಗೆ ? ನಾನು ಬೆವರು ವರೆಸಿಕೊಂಡು ಪೆಕರನ ಹಾಗೆ ನಗುತ್ತಾ “ಹೌದಾ” ಎಂದೆ.  ನನ್ನ ಪರಿವಾರದವರಂತೂ ಇನ್ನೂ ಕಂಗಾಲಾಗೇ ಕಂಡರು. ಅವತ್ತಿನ ಅವರ ಮನೆಯ ಔತಣ ಕಹಿ ಎನ್ನಿಸಿದ್ದರಲ್ಲಿ ತಪ್ಪೇನಿಲ್ಲ. ಕೆಲವರು ಮನೆಯಲ್ಲಿ ಐದಾರು ನಾಯಿಗಳನ್ನ ಸಾಕುತ್ತಾರೆನ್ನುವುದು ನನ್ನ ಮಧ್ಯತರಗತಿಯ ಮನಸ್ಥಿತಿಗೆ ತುಂಬಾ ಅಚ್ಚರಿ ತಂದಿತ್ತು. ನನಗೆ ಗೊತ್ತಿರುವ ಒಬ್ಬ ಉದ್ದಿಮೆದಾರ ತನ್ನ ಮನೆಯಲ್ಲಿ ಮೂವತ್ತು ವಿವಿಧ ತಳಿಗಳ ನಾಯಿಗಳಿವೆ ಎಂದು ಹೇಳಿದಾಗ ಬೆಚ್ಚಿ ಬಿದ್ದಿದ್ದೆ. ಅವುಗಳಿಗಾಗಿ ಒಂದು ಪ್ರತ್ಯೇಕ ಗಾಡಿ ಮಾಡಿದ್ದಾರಂತೆ, ನಾಲ್ಕು ಜನ ಆಳಿದ್ದಾರಂತೆ. ಅದೇನು ಶುನಕ ವ್ಯಾಮೋಹವೋ ನಾ ಕಾಣೆ ! ವಿವಿಧ ತಳಿಗಳ ನಾಯಿಗಳ ಬಗ್ಗೆ ತಿಳಿದಾಗಲೆಲ್ಲಾ ನನಗನಿಸುತ್ತಿತ್ತು, ನಾನು ನನ್ನ ಜೀವನದಲ್ಲಿ ಏನೋ ಕಳೆದುಕೊಂಡೆನೇನೋ ಎಂದು. ಆದರೇ ನಾಯಿಗಳ ಬಗ್ಗೆ ಇರುವ ನನ್ನ ಗಾಬರಿ ಮಾತ್ರ, ನನ್ನ ಅವುಗಳನ್ನ ಹತ್ತಿರ ಸೇರಲು ಬಿಡಲಿಲ್ಲ. ಹೀಗೇ ಪಾರ್ಕುಗಳಿಗೆ ಅಥವಾ ರಸ್ತೆಯ ಮೇಲೆ ವಿಹಾರಕ್ಕೆ ಹೋಗುವಾಗ, ನಾಯಿಗಳ ಒಡೆಯರು ತಮ್ಮ ಜೊತೆಗೆ ಕರೆದೊಯ್ಯುವ ತಮ್ಮ ಸಾಥಿಗಳನ್ನ ನೋಡುತ್ತಾ ಅದು ಯಾವ ತಳಿಯ ನಾಯಿ ಇರಬಹುದು ಅಂತ ಊಹೆ ಮಾಡುತ್ತಿದ್ದೆ. ಭೂಮಿಗೆ ಸಮಾನಾಂತರವಾಗಿರುವ ಕುಳ್ಳ ಕುನ್ನಿಗಳಿಂದಾ ಹಿಡಿದು ಒಡೆಯನ ಸೊಂಟದ ವರೆಗೂ ಬರುವ ಗ್ರೇಟ್ ಡೇನ್ ಕಾಲಭೈರವನ ವರೆಗೆ ಎಲ್ಲವನ್ನೂ ಕುತೂಹಲದಿಂದ ನೋಡಿದ್ದೆ. ಅಮೆರಿಕಕ್ಕೆ ಹೋದಾಗ ಅಲ್ಲಿ ಸಹ ಇನ್ನೂ ವೈವಿಧ್ಯದ ಶುನಕ ದರ್ಶನವಾಯಿತು. ಅಮೆರಿಕದಲ್ಲಿ ಶುನಕಗಳಿಗೆ ಮರ್ಯಾದೆ ಜಾಸ್ತಿ. ಅವುಗಳನ್ನ ತಮ್ಮ ಮಕ್ಕಳಿಗಿಂತ ಮಿಗಿಲಾಗಿ ನೋಡಿಕೊಳ್ಳೂತ್ತಾರೆ ಅಂತ ನನ್ನ ಮಗಳು ಹೇಳಿದಳು. ಅವುಗಳ ತರೇವಾರಿ ಅವಶ್ಯಕತೆಗಳಿಗಾಗಿ ತುಂಬಾನೇ ಪೆಟ್ ಶಾಪ್ ಗಳಿರುತ್ತವೆ.  ಅವುಗಳ ತಿಂಡಿ, ಔಷಧಿ, ಸಾಬೂನುಗಳ ಜೊತೆಗೆ ಕಾಲಕ್ಕೆ ತಕ್ಕ ಹಾಗೆ ಬದಲಿಸುವ ದಿರಿಸುಗಳು ಸಹ ಅಲ್ಲಿ ಸಿಗುತ್ತವೆ. ಶೀತಾಕಾಲದಲ್ಲಿ ಅವುಗಳಿಗೆ ಮೆತ್ತನೆಯ ಬೂಟುಗಳನ್ನು ಹಾಕಿ ಕರೆದು ತರೆತ್ತಾರೆ. ಅವುಗಳಿಗೆ ಚಳಿಯಾಗದಿರಲು ಸ್ವೆಟರ್ ಗಳು ಹಾಕುತ್ತಾರೆ. ಇನ್ನು ಡಾಗ್ ಶೋಗಳಲ್ಲಿ ಅವುಗಳಿಗೆ ಪೈಪೋಟಿಯಾಗಿ ಮಾಡುವ ಸಿಂಗಾರ ನೋಡಲು ನೂರುಕಣ್ಣು ಸಾಲದು. ಇದೆಲ್ಲದಕ್ಕೂ ಮಕುಟಾಯಮಾನವೆಂದರೇ ಅವುಗಳನ್ನು ಹೊರಗೆ ಕರೆದೊಯ್ದಾಗ ಅವುಗಳ ದೈನಂದಿನ ಬಹಿರ್ ಕೃತ್ಯಗಳಿಗಾಗಿ ಒಂದು ಪ್ಲಾಸ್ಟೀಕ್ ಚೀಲವನ್ನು ಜೊತೆಗೆ ಕೊಂಡ್ಹೋಗುವುದು. ಅವುಗಳ ಮಲವನ್ನು ಹೆಕ್ಕಿ ಆ ಚೀಲಗಳಲ್ಲಿ ಹಾಕಿ ಅಲ್ಲಲ್ಲಿ ಇದಕ್ಕಾಗಿ ಇಟ್ಟಿರುವ ಡಬ್ಬಿಗಳಲ್ಲಿ ಹಾಕಬೇಕು. ಹೊರಗೆ ಎಲ್ಲೂ ಹೇಸಿಗೆ ಆಗಬಾರದು. ಹಾಗೆ ಮಾಡಿದ್ದು ಕಂಡಲ್ಲಿ ೨೫ ಡಾಲರ್ ಜುರ್ಮಾನೆ ತೆರಬೇಕಾಗಿರುತ್ತದೆ. ಅಂದರೇ ೧೫೦೦ ಸಾವಿರ ರುಪಾಯಿ ಅಂದಾಜಿಗೆ. ಮತ್ತೆ ಅವುಗಳದ್ದು ರಾಜಭೋಗವೆಂದು ನಿಮಗೆ ಅನಿಸುವುದಿಲ್ಲವೇ ! ನಾಯಿ ಕಚ್ಚಿದರೇ ಅದಕ್ಕೆ ನಡೆಯಬೇಕಾದ ಉಪಚಾರ ಸಹ ನಮ್ಮ ತಲೆ ಕೆಡಿಸುತ್ತದೆ. ಈಗೀಗ ಅದೇನೋ ರಾಬೀಪೂರ್ ಎನ್ನುವ ಮದ್ದು ಬಂದಿದೆ ಎನ್ನುವುದು ಬಿಟ್ಟರೇ, ಹಿಂದಿನ ದಿನಗಳಲ್ಲಿ ಹೊಕ್ಕಳ ಸುತ್ತಲೂ ಹಾಕಿಸಿಕೊಳ್ಳಬೇಕಾದ ಹದಿನಾಲ್ಕು ಇಂಜೆಕ್ಷನ್ ಗಳು ನಾಯಿ ಕಡಿತಕ್ಕಿಂತ ಜಾಸ್ತಿ ಹೆದರಿಸುತ್ತಿದ್ದವು. ನಂತರ ಕಚ್ಚಿದ ನಾಯಿಯ ಮೇಲೆ ಗುಮಾನಿ ಇಡಬೇಕು. ಅದು ಹುಚ್ಚು ನಾಯಿಯಾಗಿರಬಾರದು.  ಹುಚ್ಚು ನಾಯಿ ಕಡಿದು ನಾಯಿಯ ತರ ಬೊಗಳುತ್ತಾ ಸತ್ತವರ ಕತೆಗಳು ತುಂಬಾ ಪ್ರಚಲಿತವಾಗಿದ್ದವು ಆಗ. ಅವರ ಬಾಯಿಯಿಂದ ಜೊಲ್ಲು ಸುರಿಯುತ್ತಿತ್ತು, ಅವರನ್ನ ಕಂಬಕ್ಕೆ ಕಟ್ಟಿ ಹಾಕುತ್ತಿದ್ದರು. ಇಡೀರಾತ್ರಿ ಕೆಟ್ಟದಾಗಿ ಬೊಗಳಿತ್ತಿದ್ದರು ಎನ್ನುವ ಸುದ್ದಿಗಳಿಗೇನೂ ಬರವಿರಲಿಲ್ಲ. ಈಕಾರಣಕ್ಕಾಗಿ ನಾಯಿಯನ್ನ ಸಾಕುವುದಿರಲಿ, ಹತ್ತಿರ ಬಿಟ್ಟುಕೊಳ್ಳುವುದು ಸಹ ತುಂಬಾ ಡೇಂಜರ್ರಾಗಿ ಕಾಣುತ್ತಿತ್ತು. ಈಗ ಸಹ ಈ ಹೊಸ ಲಸಿಕೆಯನ್ನ ಎಷ್ಟು ಜನ ಹಾಕಿಸಿಕೊಂಡಿದ್ದಾರೆ, ಅವರಿಗೆ ಅದು ಎಷ್ಟರ ವರೆಗೆ ಗುಣ ಕಾಣಿಸಿದೆ ಎಂದು ಇನ್ನೂ ಸರಿಯಾದ ಮಾಹಿತಿ ಗೊತ್ತಿಲ್ಲ. ಆದರೇ ಹದಿನಾಲ್ಕು ಇಂಜಕ್ಷನ್ ಬೇಡ ಎನ್ನುವುದು ಒಂತರಾ ನೆಮ್ಮದಿ. ಇನ್ನು ಈ ನಾಯಿಗಳಿಗೆ ಸೈಕಿಲುಗಳ ಮತ್ತು ದ್ವಿಚಕ್ರ ವಾಹನಗಳ ಹಿಂದೆ ಬೀಳುವ ಅಭ್ಯಾಸವಿರುತ್ತದೆ. ಕಾರಿನ ಹಿಂದೆ ಸಹ ಬೀಳುತ್ತವೆ ಆದರೇ ಅವುಗಳಲ್ಲಿ ಕೂತವರು ಸೇಫ್. ಹಾಗಾಗಿ ಪ್ರಹಸನಗಳಾಗುವುದಿಲ್ಲ. ಆದರೇ ದ್ವಿಚಕ್ರವಾಹನಗಳ ಸವಾರರ ಹಿಂದೆ ಬಿದ್ದು  ಕೆಲ ಕಹಿ ಅನುಭವಗಳನ್ನೊದಗಿಸಿವೆ ಎಂದು ಹೇಳಬಹುದು.  ನಾನು ಮತ್ತು ನನ್ನವಳು ಒಮ್ಮೆ ದೇವಸ್ಥಾನದಿಂದ ಮನೆಗೆ ಬರುವಾಗ ಒಂದು ಸಂದಿಯಲ್ಲಿ ಒಂದು ಚಿಕ್ಕ ನಾಯಿ ನಮ್ಮ ಹಿಂದೆ ಬಿದ್ದಿತ್ತು. ಚಿಕ್ಕದು ಅಂತ ಯಾಕೆ ಪ್ರತ್ಯೇಕವಾಗಿ ಹೇಳುತ್ತಿದ್ದೇನೆ ಅಂದರೇ ಅದು ಚಿಕ್ಕದಾಗಿದ್ದರಿಂದ ಅದರ ವೇಗ ತುಂಬಾ ಜಾಸ್ತಿಯಾಗಿತ್ತು. ನಾನು ಗಾಡಿಯ ವೇಗ ಜಾಸ್ತಿ ಮಾಡಿದರೂ ಅದು ನಮ್ಮನ್ನ ಬಿಡಲಿಲ್ಲ. ನನ್ನವಳ ಸೀರೆಯ ಅಂಚನ್ನ ಹಿಡಿದುಬಿಟ್ಟಿತ್ತು. ಅವಳಿಗೂ ಹೆದರಿಕೆ, ನಂಗಂತೂ ಗಾಡಿ ಬಿಡುವುದರ ಜೊತೆಗೆ ಹಿಂದೆ ಬಿದ್ದ ಈ ಅವಾಂತರವನ್ನ ನಿಭಾಯಿಸಬೇಕಾಯಿತು. ಯಾರೋ ಅದಕ್ಕೆ ಕಲ್ಲು ತೂರಿ ಬಿಡಿಸುವುದರಲ್ಲಿ ನಾವಿಬ್ಬರೂ ಆಯ ತಪ್ಪಿ ಬೀಳುವುದೇ ಆಯಿತು. ಪುಣ್ಯ ಜಾಸ್ತಿ ಪೆಟ್ಟಾಗಲಿಲ್ಲ. ಸ್ವಲ್ಪದರಲ್ಲೇ  ಬಚಾವಾಯಿತು. ಪ್ರಭಾವಲಯದ ಮಾತು ಬಂದಾಗ ಇನ್ನೊಂದು ವಿಷಯ ಚರ್ಚೆಗೆ ಬರುತ್ತದೆ. ನಾಯಿಗಳ ಜಗಳಕ್ಕೂ ಈ ಪ್ರಭಾವಲಯಕ್ಕೂ ತುಂಬಾ ನಿಕಟ ಸಂಬಂಧ. ಪ್ರತಿ ನಾಯಿಯೂ ತನ್ನ ಪ್ರಭಾವಲಯವನ್ನ ಏರ್ಪಡಿಸಿಕೊಳ್ಳುತ್ತದಂತೆ. ಸಾಕುನಾಯಿಗಳಿಕೆ ತಾವಿರುವ ಮನೆಯೇ ಈ ವ್ಯಾಪ್ತಿ ಪ್ರದೇಶ ವಾಗಿದ್ದರೇ, ಮತ್ತೆ ಬೀದಿ ನಾಯಿಗಳಿಗೆ ಯಾವುದು ಮತ್ತು ಎಲ್ಲಿಯವರಗೆಎನ್ನುವ ಪ್ರಶ್ನೆ? ಈ ಸಂದಿಗ್ಧವೇ ಜಗಳಗಳ ನಾಂದಿ. ಪ್ರತಿ ನಾಯಿ ಅಥವಾ ಆ ಬೀದಿನಾಯಿಗಳ ಗುಂಪು ಒಂದು ನಿರ್ದಿಷ್ಟ ಪ್ರದೇಶವನ್ನು ತಮ್ಮ ವ್ಯಾಪ್ತಿ ಪ್ರದೇಶವಾಗಿ ನಿರ್ದೇಶಿಸಿಕೊಳ್ಳುತ್ತವೆಯಂತೆ. ಆ ವ್ಯಾಪ್ತಿ ಪ್ರದೇಶಕ್ಕೆ ಬೇರೊಂದು ನಾಯಿ ಬಂದಾಗ ಅವುಗಳು ಬೊಗಳುತ್ತಾ ತಮ್ಮ ನಿಲುವನ್ನ ತೋರಿಸುತ್ತವೆ, “ನೀನು ನಿನ್ನ ಹದ್ದು ಮೀರಿ ಬಂದಿದೀಯಾ” ಅಂತ. ಬಾಲ ಮುದುರಿಕೊಂಡು ಓಡಿದರೇ ಸರಿ. ಇಲ್ಲಾ ಇದ್ದೇ ಇದೆಯಲ್ಲಾ ನಾಯಿತರಾ ಕಚ್ಚಾಟ. ನಾಯಿಗಳ ಬಗ್ಗೆ ತುಂಬಾ ತೆಗಳಿದ ಹಾಗಾಯಿತಲ್ಲವೇ ? ಇದನ್ನ ಶುನಕ ಪ್ರೇಮಿಗಳು ಸಲೀಸಾಗಿ ತೆಗೆದುಕೊಳ್ಳಲಿಕ್ಕಿಲ್ಲ. ಅದಕ್ಕೇ ಈ ಕೆಳಗಿನ ಸಾಲುಗಳು. ನಾಯಿಗಳು ಸಮಾಜ ಸೇವಕರಾಗಿ ಖ್ಯಾತಿ ಗಳಿಸಿವೆ. ತುಂಬಾ ವಿಶ್ವಾಸದ ಪ್ರಾಣಿ. ಅನ್ನ ಕೊಟ್ಟವರ ಮನೆಯನ್ನು ಜತನವಾಗಿ ಕಾಯುತ್ತವೆ. ನುಸುಳಿ ಬಂದವರನ್ನು ನೆಲ ಕಚ್ಚುಸುತ್ತವೆ. ಅವುಗಳ ಘ್ರಾಣ ಶಕ್ತಿ ತುಂಬಾ ತೀಕ್ಷ್ಣವಾಗಿದ್ದು, ಪೋಲಿಸ್ ಇಲಾಖೆಗೆ  “ಮೂಸುವನಾಯಿ”ಗಳಾಗಿ ತುಂಬಾ ಸೇವೆ ಗೈಯುತ್ತವೆ.  ಇನ್ನು ಉಪಾಖ್ಯಾನಕ್ಕೆ ಮಂಗಳ ಹಾಡುವ ಮುನ್ನ ಒಂದು ನಗೆಹನಿ ಇವುಗಳ ಬಗ್ಗೆ. ಹೊರಗಡೆ ತಿರುಗುತ್ತಿರವ ಒಬ್ಬರಿಗೆ ನಾಯಿ ಕಚ್ಚಿತು. ಅವರು ತಮ್ಮಕೈಲಿದ್ದ ಕೊಡೆಯಿಂದ ನಾಯಿಗೆ ನಾಲ್ಕು ಬಾರಿಸಿದರು. ನಾಯಿಗೆ ಪೆಟ್ಟಾಯಿತು. ನಾಯಿಯ ಮಾಲೀಕ ಕೋರ್ಟಿಗೆ ಹೋದ. ಕೇಸು ವಿಚಾರಣೆಗೆ ಬಂದಾಗ ಆರೋಪಿ ತನ್ನ ವಾದವನ್ನು

ಶ್ವಾನೋಪಾಖ್ಯಾನ Read Post »

ಕಾವ್ಯಯಾನ

ಹೊರಗಿನವ

ಕವಿತೆ ಹೊರಗಿನವ ಡಾ. ಅರಕಲಗೂಡು ನೀಲಕಂಠ ಮೂರ್ತಿ. ನಾನೀಗ ಹೊರಗಿನವಇದ್ದ ಹಾಗೆ.ಒಳಗೂ ಇಲ್ಲದವನುಹೊರಗೂ ಹೋಗದವನು–ಪೂರ್ತಿಆದರೂ…ನಾನೀಗ ಹೊರಗಿನವಇದ್ದಂತೆ. ಎಷ್ಟರಮಟ್ಟಿಗೆ ಹೊರಗಿನವನುಅಥವ ಎಷ್ಟು ಇನ್ನೂ ಒಳಗಿನವನುಈ ಅಂದಾಜು ನನಗೇ ಸಿಗದವನು! ಹೆಜ್ಜೆಯೊಂದ ಹೊಸ್ತಿಲಾಚೆಇಟ್ಟವನಿರಬಹುದುಆದರೆ ವಾಸ್ತವವೆಲ್ಲಒಳಗೇ ಇನ್ನೂ… ಊರಿಗೆ ಹೊರಟಂತೆರೆಡಿಯಾಗಿ ಕೂತವನಂತೆ–ಅಂತೂ…ಯಾವ ಗಳಿಗೆಯಲ್ಲೂ ಗಾಡಿಬಂದು ನಿಲ್ಲಬಹುದು… ಹೌದು–ಸಂಜೆಯ ಮಬ್ಬು ಗಾಢವಾಗುವ ಹಾಗೆಕಣ್ಣ ಹರಿತ ಮೊಂಡಾದಹೊತ್ತು…ನಾನೀಗ ಹೊರಗಿನವಇದ್ದಹಾಗೆ…ಇನ್ನೆಷ್ಟು ಹೊತ್ತು–ಹೊರಗಿನವನೇ ಪೂರ್ತಿಆಗಲು ಅನಾಮತ್ತು…! ***************************************

ಹೊರಗಿನವ Read Post »

ಕಾವ್ಯಯಾನ

ಕಾವ್ಯಯಾನ

ಕವಿತೆ ನನ್ನ ನೋವು ಸಾತುಗೌಡ ಬಡಗೇರಿ ಕಣ್ಣೀರ ಹನಿಯೊಂದುಹೇಳುತ್ತಿದೆ ಹೊರಬಂದುನೊಂದ ಹೃದಯದ ತನ್ನ ವ್ಯಥೆಯ.ಸೂತ್ರವು ಹರಿದಂತಹಪಟದಂತೆ ಬಾಳಾಗಿಕಥೆಯಾಗಿ ಹೇಳುತ್ತಿದೆ ಬೆಂದು ಹೃದಯ. ಜೊತೆಯಾಗಿ ಉಸಿರಾಗಿನಿನಗಾಗಿ ನಾನಿರುವೆ..ಮಾತು ಕೊಟ್ಟನು ನಲ್ಲನಂದು.ಮರೆತು ಹೊರಟಿಹನುತಬ್ಬಲಿಯ ನನಮಾಡಿಕಂಬನಿ ಮಿಡಿಯುತ್ತಿದೆ ಕೇಳಿಯಿಂದು. ನಿನಬಾಳು ಬೆಳಕಾಗಿನಗುತಲಿರು ಓ ಗೆಳೆಯಾ…ನಿನ್ನಮೊಗ ತೋರದಿರು ಮುಂದೆ ಎಂದು.ಕಹಿ ನೆನಪ ನಾಹೊತ್ತುಬಾಳುವೆ ನಾನಿಲ್ಲಿಕಣ್ಣೀರಧಾರೆ ಸುರಿಸುತ್ತಾ ಮುಂದು ****************************

ಕಾವ್ಯಯಾನ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಎ.ಹೇಮಗಂಗಾ ಮಧುಶಾಲೆಗಿನ್ನು ಮರಳಲಾರೆ ಸಾಕಿ ಬೇಡವಾಗಿದೆ ಮಧುಬಟ್ಟಲುನೆನಪ ಗೋರಿಯನಿನ್ನು ಅಗೆಯಲಾರೆ ಸಾಕಿ ಬೇಡವಾಗಿದೆ ಮಧುಬಟ್ಟಲು ಏಕಾಂಗಿ ಜೀವದ ತಾಪ ತಣಿಸಲೆಂದೇ ಏಕಾಂತದಿ ಮೈ ಮರೆತವನುನೋವ ಕುಲುಮೆಯಲ್ಲಿನ್ನು ಬೀಳಲಾರೆ ಸಾಕಿ ಬೇಡವಾಗಿದೆ ಮಧುಬಟ್ಟಲು ಸಾವಿರ ಟೀಕೆಗಳ ಕತ್ತಿ ಇರಿತಕೆ ಬಲಿಯಾಗಿಸಿದರು ಕುಹಕಿ ಗೆಳೆಯರುನಾಲಿಗೆಗಿನ್ನು ಆಹಾರವಾಗಲಾರೆ ಸಾಕಿ ಬೇಡವಾಗಿದೆ ಮಧುಬಟ್ಟಲು ಮಂದ ಬೆಳಕಿನ ನಿಶೆಯ ನಶೆ ಲೋಕ ಬಲೆಯಾಗಿ ಉಸಿರುಗಟ್ಟಿಸಿದೆಬೇಡುತ ಮದಿರೆಗಿನ್ನು ದಾಸನಾಗಲಾರೆ ಸಾಕಿ ಬೇಡವಾಗಿದೆ ಮಧುಬಟ್ಟಲು ಬದುಕಿನ ಗಮ್ಯ ಸಾರ್ಥಕತೆಯತ್ತ ಸೆಳೆಯಲು ಕೈ ಬೀಸಿ ಕರೆಯುತ್ತಿದೆಅವನತಿ ಹಾದಿಯನಿನ್ನು ತುಳಿಯಲಾರೆ ಸಾಕಿ ಬೇಡವಾಗಿದೆ ಮಧುಬಟ್ಟಲು ***********************************

ಗಝಲ್ Read Post »

ಕಾವ್ಯಯಾನ

ಕಾಂಕ್ರೀಟ್ ಬೋಧಿ

ಕವಿತೆ ಕಾಂಕ್ರೀಟ್ ಬೋಧಿ ಪೂಜಾ ನಾರಾಯಣ ನಾಯಕ ಯಾವ ಹಕ್ಕಿ ಎಸೆಯಿತೋ, ನನ್ನ ಬೀಜವನಿಲ್ಲಿಅದರ ಪರಿಣಾಮವೇ ಬೆಳೆದೆನಾಯಿಲ್ಲಿಸಿಮೆಂಟ್ ಗಾರೆಯ ಬಿರುಕಿನಾ ಕಿಂಡಿಅದುವೇ ನನ್ನ ಬದುಕಿನಾ ಮೊದಲನೆಯ ಬಂಡಿಗೆದ್ದುಬರುತ್ತಿದ್ದೆ ಆ ಬಿರುಕ ಇನ್ನೂ ಸರಿಸಿಆದರೆ ನೀ ಬರದೇ ಇರಲಾರೆ, ಕೀಳಲು ನನ್ನರಸಿ ಕರವೊಡ್ಡಿ ಬೇಡುವೇ, ಕೀಳಬೇಡವೋ ಮನುಜಕೀಳದಿದ್ದರೆ ನಾ ನೀಡುವೆ, ಔಷಧೀಯ ಕಣಜನಿನಗಷ್ಟೇ ಎಂದು ತಿಳಿಬೇಡವೋ ಅಣ್ಣಾಖಗಗಳಿಗೂ ನೀಡುವೆನೋ ತಿನ್ನಲು ಹಣ್ಣಾನಿಮ್ಮಿಬ್ಬರಿಗೆ ಎಂದು ತಿಳಿಯದಿರು ಮತ್ತಣ್ಣಮೃಗಗಳಿಗೂ ನೀಡುವೆನೋ ನನ್ನ ಮೇವಣ್ಣ ನೀನಾಗಿಹೆ ಇಂದು ಕ್ರೋಧದಾ ಬಂಧನಕೇಳಿಸುತ್ತಿಲ್ಲವೇನೋ ನಿನಗೆ, ನನ್ನ ಮನದ ಆಕ್ರಂದನಹಿಡಿದು ನಿಂತಿರುವೆ ನೀನಿಂದು, ಖಡ್ಗ ಮಹಾರಾಜನಕೆಳಗಿಳಿಸೋ ಮಾರಾಯಾ, ಕೊಡುವೆ ನಾನಿಂಧನನನ್ನ ನೆರಳಿನಲಿ ಕುಳಿತಿದ್ದು, ಮರೆತೋಯ್ತೋ ಏನೋ?ನೀ ಮರೆತೆಯೆಂದು, ನಾ ಮರೆವೆನೇನೋ? ನೀ ಕೂರದೇ ಇರಬಹುದು, ನೆರಳಿನಾ ಕೆಳಗೆಯಾಕೆಂದರೆ ನೀನಿರುವೆ ಕಾಂಕ್ರೀಟ್ನ ಒಳಗೆನೀ ಬಯಸಲಾರೆ, ಎಸಿಯಲಿ ಉಳಿದುಬಯಸುವನು ರೈತ, ಬಿಸಿಲಿನಲಿ ಬಸವಳಿದುಕೇಳಿಸಿಕೋ, ಕೇಳಿಸಿಕೋ ಮನದಾಳದ ಕೂಗವಾಸಿಮಾಡುವೆನು ನಿನ್ನ ಧೀರ್ಘಕಾಲದ ರೋಗ ಬುದ್ಧನಿಗೆ ನೀಡಿದೆ ಜ್ಞಾನವನಾನಂದುನೀನಾಗಬೇಡವೋ ಕೊಲೆಗಡುಕನಿಂದುಸುಡು ಬಿಸಿಲ ಸಹಿಸಿ,ಪರ ಹಿತವ ಬಯಸಿನಾ ಬಾಳುವ ಪರಿಅದುವೇ ನಿನಗೆ ಆದರ್ಶದ ಗರಿ. ******************************************************

ಕಾಂಕ್ರೀಟ್ ಬೋಧಿ Read Post »

You cannot copy content of this page

Scroll to Top