ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅನುವಾದ

ಸೇಡಿನ ಫಲ

ಸೇಡಿನ ಫಲ ವಿಲಿಯಂ ಬ್ಲೇಕ್ ಕವನದ ಅನುವಾದ ನನ್ನ ಗೆಳೆಯನ ಮೇಲೆ ಬಂದ ಮುನಿಸಿಗೆ ನಾನುತಾಳ್ಮೆಯಿಂದಲೆ ಅಂದೆ, ‘ಸುಮ್ಮನಿರು’ ಎಂದುಮಾಯವಾಗಿಯೆ ಹೋಯ್ತು ಕೋಪವಂದು.ನನ್ನ ವೈರಿಯ ಮೇಲೆ ಬಂದ ಮುನಿಸಿಗೆ ನಾನುಕೋಪದಿಂದಲೆ ನುಡಿದೆ, ‘ಚೆಂಡಾಡು’ ಎಂದುಮನದೊಳಗೆ ಬೆಳೆಯಿತದು ನನಗರಿವಿಲ್ಲದೆಲೆ ಹಗೆತನದ ಬೀಜವದು ಮೊಳಕೆಯೊಡೆಯುತ್ತಸಸಿಯಾಗಿ ಬೆಳೆದು ಮರವಾಗಿ ನಿಂತಿತ್ತುಭಯವೆಂಬ ಕಣ್ಣೀರ, ನಗುವೆಂಬ ಎಳೆ ಬಿಸಿಲನೀಡುತ್ತ ಬೆಳೆಸಿದೆನು ಹಗಲು ರಾತ್ರಿಯೆನ್ನದೆಲೆವಂಚನೆಯ ತಂತ್ರಗಳ ನಡುನಡುವೆ ತುರುಕುತ್ತಮರವಾಗಿ ಬೆಳೆಸಿದೆನು ಸೇಡಿನಾ ಗಿಡವನ್ನು ಮರ ಬೆಳೆದು ಹೂವಾಯ್ತು, ಹೂವರಳಿ ಹಣ್ಣಾಯ್ತುನನ್ನ ಅರಿ ನೋಡಿದನು ಥಳಥಳಿಪ ಹಣ್ಣನ್ನುಕಿಂಚಿತ್ತು ಯೋಚಿಸಿದಲೆ ನನ್ನ ಹಣ್ಣೆಂದರಿತುಕಳಿತ ಹಣ್ಣನು ಕದ್ದು ತಿಂದು ಮುಗಿಸಿದನುಕತ್ತಲಿನ ಆವರಣ ಅವನ ಕಣ್ಣನು ಮುಚ್ಚಿನನ್ನ ಖೆಡ್ಡದಲಿ ಅವನ ಎಳೆದು ಕೆಡವಿತ್ತು ಬೆಳಗಿನಾ ಬೆಳಕಲ್ಲಿ ಸಂತಸದಿ ನೋಡಿದೆನುನನ್ನ ಮರದಡಿಯಲ್ಲಿ ಸೆಟೆದು ಬಿದ್ದಾ ವೈರಿಯನು **************************************** ಮೂಲ: A Poisonous Tree: By William Blake ಕನ್ನಡಕ್ಕೆ: ಗಣೇಶ್.ವಿ

ಸೇಡಿನ ಫಲ Read Post »

ಇತರೆ

ನಂದ ಗೋಕುಲ

ಅನುಭವ ನಂದ  ಗೋಕುಲ ಮಾಲಾ ಕಮಲಾಪುರ್ ನಾನು  ಸರ್ಕಾರಿ ಶಾಲೆಯಲ್ಲಿ  ಶಿಕ್ಷಕಿ ಯಾಗಿ ಕೆಲಸ ನಿರ್ವಹಿಸುವಾಗ ನಡೆದ ಘಟನೆ. ಒಂದು ದಿನಾ ನಾಲ್ಕನೆಯ ತರಗತಿಯಲ್ಲಿ ಓದುತ್ತಿದ್ದ ಹೆಣ್ಣು ಮಗು ತರಗತಿಯಲ್ಲಿಯೇ ಮೊದಲು ಆಕಿಗೆ ಕಲಿಕೆಯಲ್ಲಿ ಆಸಕ್ತಿ. ಮನೆಯಲ್ಲಿ ತಾಯಿ ಸಹ ಕೂಲಿ ನಾಲಿಮಾಡಿ ಓದಿಸುತ್ತಿದ್ದಳು ತಂದೆಗೆ ಇದಾವ ಪರಿವೇ ಇಲ್ಲದೆ ಸದಾ ಕುಡಿದುಕೊಂಡು ಮನೆಗೆ ಬಂದು ಹೆಂಡತಿ ಮಗುವಿಗೆ ಹೊಡೆದು ಬಡೆದು ಮನೆ ಬಿಟ್ಟು ಹೋಗುವದು ಇದೆಲ್ಲದರ ನಡುವೆ ಮಗು ಗುಡಿಸಿಲಿನಲ್ಲಿ ಓದುವುದು ರಜೆಯದಿನ ಹೊಲದಲ್ಲಿ ತಾಯಿಗೆ ಸಹಾಯ ಮಾಡೋದು ಎಲ್ಲೋ ಹೋಗಿ ನೀರು ತರುವದು ಹೀಗೆ ಎಲ್ಲದರಲ್ಲೂ ತನ್ನದೇ ಛಾಪು ಮೂಡಿಸಿ ಸೈ ಅನಿಸಿಕೊಂಡ ಮಗು. ದಿನಾಲೂ ಶಾಲೆಗೆ ಬರುವಾಗ ಕಣ್ಣು ಒರೆಸುತ್ತಾ ಓಡೋಡಿ ಪ್ರಾರ್ಥನೆ ಸಮಯಕ್ಕೆ ಬರುತ್ತಿದ್ದಳು. ಆದರೆ ಒಂದು ದಿನ ಮಾತ್ರ ಶಾಲೆಗೆ ಒಂದು ತಾಸು ತಡವಾಗಿ ಬಂದು ಹೊರಗಡೆಯೇ ಅಳುತ್ತ ನಿಂತಿದ್ದು ನೋಡಿ ನಾನು ಒಳಗೆ ಕರೆದೆ ಏನಾಯಿತು ಯಾಕೆ ಅಳುತ್ತಿರುವೆ ಬಾ ತರಗತಿ ಯೊಳ್ಗೆ ಅಂದೆ. ಅದಕ್ಕೆ ಆ ಮಗು ಹೆದರುತ್ತ ಗಾಬರಿಯಾಗಿ ಬಲಕೈಯನ್ನು ತನ್ನ ಡ್ರೆಸ್ನಲ್ಲಿ ಮುಚ್ಚಿಕೊಂಡು ಅಳುತ್ತ ನಾನು ಮನೆಗೆ ಹೋಗಿ ಬರುವೆ ಅಂದಳು. ಕೈನಡುಗತ್ತ ಬೆವರುತ್ತ ಹೇಳಿದಳು ಏನು ಇದೆ? ನಿನ್ನ ಕೈಯಲ್ಲಿ ಅಂದೆ. ಅದಕ ಆ ಮಗು ಸ್ಕರ್ಟ್ನಲ್ಲಿ ಮುಚ್ಚಿದ ಕೈ ತೆಗೆದು ಸರಾಯಿ ಬಾಟಲಿ ತೋರಿಸಿ ಇದು ನಮ್ಮ ಅಪ್ಪ ತೆಗೆದುಕೊಂಡು ಬರಲು ನಂಗೆ ಹೇಳಿದ. ನಾನು ತರೋಲ್ಲ ಅಂದರೆ ನಂಗೆ ಮೈಯಲ್ಲ ಬರೇ ಬೀಳುವಂತೆ ಹೊಡಿದಿರುವ ಅಂದಳು ಅದಕ್ಕೆ ನನಗೆ ಶಾಲೆಗೆ ಬರುವುದು ತಡ ವಾಯಿತು ಮೇಡಂ ಅಂದಾಗ ನನ್ನ ಕಣ್ಣಿಂದ ನೀರು ಜಾರಿತು. ಅಯ್ಯೋ ಎಂಥ ತಂದೆ ಮಗಳು ಅನ್ನುವದನ್ನು ಮರೆತು ತನ್ನ ಹುಚ್ಚು ವ್ಯಸನಕ್ಕೆ ಏನೆಲ್ಲಾ ಮಾಡುತ್ತಾರಲ್ಲ ಅನಿಸಿತು. ಎಲ್ಲಿಯವರೆಗೆ ದುಶ್ಟಟದ ವ್ಯಸನಿಗಳು ಅದರಿಂದ ದೂರವಾಗುವುದಿಲ್ಲವೋ ಅಲ್ಲಿಯವರೆಗೂ ಇಂಥ ಹೆಣ್ಣು ಮಕ್ಕಳ ಗೋಳು ತಪ್ಪಿದ್ದಲ್ಲ. ಅದಕ್ಕೆ ಹೇಳೋದು ಮನೆಯಲ್ಲಿ ಸಂಸ್ಕಾರ ಕೊಡುವ ತಂದೆ ತಾಯಿ ಮೊದಲು ಸರಿ ಇರಬೇಕು ಆಗ ಮನೆಯ ಮಕ್ಕಳು ಅದನ್ನೇ ನೋಡಿ ಅನುಸರಿಸುವರು. ಮನೆಯಲ್ಲಿ ಸುಂದರ ವಾತಾವರಣ ಇದ್ದರೆ ಅಲ್ಲಿ ಸುಖ ನೆಮ್ಮದಿ ಶಾಂತಿ ಕಾಣಲು ಸಾದ್ದ್ಯ ಮನೆ ನಂದ ಗೋಕುಲವಾದರೆ ಮಕ್ಕಳ ಭವಿಷ್ಯ ಅದೆಷ್ಟು ಚಂದ. ಮನೆಯೊಂದು  ನಂದ ಗೋಕುಲವಾದರೆ ಅಲ್ಲಿರುವ ಸುಂದರ ಮೊಗ್ಗುಗಳನೋಟ ಅದೆಷ್ಟು ಚಂದ. ಆ  ಮೊಗ್ಗುಗಳಿಗೆ ಚಿವಟಿಹಾಕದೆ ಅರಳುತ್ತಿರುವ ಹೂವು ಆಗುವುದನ್ನು ನೋಡೋಣ  ಆ ಹೂವು ಜ್ಞಾನ ವೆಂಬ ಪರಿಮಳ ಬೀರಿ ತನ್ನ ಕೀರ್ತಿ ಪತಾಕೆಯನ್ನು ಹಾರಿಸುವುದಲ್ಲವೇ.. *********************************

ನಂದ ಗೋಕುಲ Read Post »

ಕಾವ್ಯಯಾನ

ಕಾವ್ಯ ಲೋಕದ ರವಿತೇಜ

ಕವಿತೆ ಕಾವ್ಯ ಲೋಕದ ರವಿತೇಜ ಶಿವರಂಜಿನಿ ,ಎಂಆರ್ ಶಿವಣ್ಣ ಸಾರಸ್ವತ ಅಂಗಳದಲಿಮಂದಹಾಸ ಬೀರುತಅರಳಿದಸುಂದರ ಹೂನೀವು ತಾನೆ ?ಕಾವ್ಯ ಸುಮದಿ ಘಮ ಘಮಿಸಿದನಿಮ್ಮ ಭಾವಗಳ ಐಸಿರಿಗೆಸೋತವಳು ನಾನು ತಾನೆ ? ಗೀತ ಸಂಗೀತ ಸ್ವರಗಳಲಿಸುರ ತರಂಗಗಳನೇಳಿಸಿದವರುನೀವು ತಾನೆ ?ಮನ ತುಂಬಿ ಅದರ ಗಾನ ರಸಸ್ವಾದಸವಿಯುಣುತ ಮೈಮರೆತವಳು ನಾನು ತಾನೆ ? ಗಾನ ಸರಸ್ವತಿಗೆ ಅಕ್ಷರ ಮಾಲೆಗಳ ತೊಡಿಸಿ,ಮಾಸದ ರವಿತೇಜನೀವೇ ತಾನೆ ?ನಿಮ್ಮಗೀತಿಕೆಗಳ ಮಂದಾರ ಚೆಂದವೆನಿಸಿಮಧುರ ರಾಗಗಳ ಗುನು ಗುನುಸುತಮುಗ್ಧಗೊಂಡವಳು ನಾನು ತಾನೆ? ಜನ ಮೆಚ್ಚಿದ ಜಗ ಮೆಚ್ಚಿದನಾನೂ ಮೆಚ್ಚಿದ ಕವಿ ನೀವು ತಾನೆ ?ನಿಮಗೇ ಗೊತ್ತಿರದ ಅಭಿಮಾನಿನಾನು ತಾನೆ ? ಸಂಜೆ ಮುಂಜಾನೆಗಳ ಸೊಬಗಿನಲಿಕಾವ್ಯ ಸಿರಿ ಮಂದೆಲರ ತಂಪಿನಲಿಮೆರೆವ ಕೀರ್ತಿ ಶಿಖರದ ಚೆಲುವಿನಲಿಸೃಜನಶೀಲ ಸಂಪನ್ನತೆಯಲಿ ನಿಂತವರುನೀವೆ ತಾನೆ ?ನಿಮ್ಮೊಲುಮೆಯ ಕಾವ್ಯ ಚೆಲುವಿಗೆ ಹಾರೈಸಿ,ನಾದಲೋಕದ ನಲುಮೆಯ ಹಿರಿಕವಿಗೆನಮಿಸುತಿರುವ ಕೂಸುನಾನು ತಾನೆ ?ಹಾಡ್ಬರಹಗಳ ಏರಿಳಿತಗಳಲಿಲಯಗಳ ಸಂಚಲನದಿಸಾಹಿತ್ಯ ರಂಗೇರಿಸಿನಿಮಗೆ ಸಾಟಿಯಾದವರುನೀವು ತಾನೆ ?ಅಶ್ವಮೇಧ ಯಾಗದ ಕಿಚ್ಚಿಗೆ ಬೆಚ್ಚಿಮುಖವಾಡಗಳುಗುಳುವಜ್ವಾಲೆಗಳಲಿ ನೊಂದರೂನಿಷ್ಕಪಟತೆಯ ದೊಡ್ಡ ಹೊಳೆ ಹರಿಸುವನಿಮ್ಮ ಹಿಂಬಾಲಿಸುತಿರುವೆ,ಇದು ಸರಿ ತಾನೆ.? ***************************.( ಡಾ.ದೊಡ್ಡರಂಗೇಗೌಡರ ಜನಮ ದಿನದಂದು ಅವರಿಗೆ ಬರೆದ ನುಡಿ ನಮನ)

ಕಾವ್ಯ ಲೋಕದ ರವಿತೇಜ Read Post »

ಅಂಕಣ ಸಂಗಾತಿ, ದಿಕ್ಸೂಚಿ

ಅಂಕಣಬರಹ                             ಬದುಕಿನ ಏರಿಳಿತಗಳನು ಒಪ್ಪಿಕೊಳ್ಳುವುದು ಹೇಗೆ? ಬದುಕಿನ ರೀತಿಯೇ ಅಂಥದ್ದು. ಪ್ರತಿ ಕ್ಷಣವೂ ಹೊಸತನದಿಂದಲೇ ಕೂಡಿಕೊಂಡಿರುತ್ತದೆ.ಅದೆಷ್ಟೇ ಬೇಸರಗೊಂಡಿದ್ದರೂ ಮತ್ತೆ ಕುತೂಹಲದಿಂದ ಸೆಳೆದು ನಿಲ್ಲಿಸಬಲ್ಲ ಮಾಯಾಶಕ್ತಿ ಅದಕ್ಕಿದೆ. ರಾಶಿ ರಾಶಿ ಹೊಸ ಅನುಭವಗಳು ಮುಂದೆ ಕಾದಿವೆ ಎಂದು ಗೊತ್ತಿದ್ದರೂ ಕೆಲವೊಂದು ಸಲ ಕಷ್ಟದ ಸಾಲುಗಳು ಇನ್ನಿಲ್ಲದಂತೆ ಆವರಿಸಿ ಹಿಂಡಿ ಹಿಪ್ಪಿ ಮಾಡಿಬಿಡುತ್ತವೆ. ಪ್ರತಿ ಕಷ್ಟವೂ ವಿಶಿಷ್ಟತೆಯಿಂದ ಕಾಡುತ್ತದೆ. ಅನುಭವದ ಪಾಠವನ್ನು ಕಲಿಸಿಯೇ ಮುನ್ನಡೆಯುತ್ತದೆ. ಒಮ್ಮೊಮ್ಮೆ ದಡದಡನೆ ಓಡುವವರನ್ನು ಗಕ್ಕನೇ ನಿಲ್ಲಿಸಿ ಬಿಡುತ್ತದೆ. ಅಟ್ಟದ ಮೇಲೇರಿ ಕುಳಿತವರನ್ನು ಕೆಳಕ್ಕೆ ತಳ್ಳಿ ಬಿಡುತ್ತದೆ. ಇನ್ನು ಕೆಲವು ಸಲ ಕೌತುಕತೆಯಿಂದ ಅದರ ಮುಂದೆ ನಿಂತು ಬಿಟ್ಟ ಕಣ್ಣು ಬಿಟ್ಟಂತೆ ಪರವಶತೆಯಿಂದ ನೋಡುವಂತೆ ಮಾಡುತ್ತದೆ. ಲಗು ಬಗೆಯಿಂದ ಮೆಟ್ಟಿಲೇರಿ ಹೋಗುವವರನ್ನು ಮುಂದಕ್ಕೆ ಅಡಿ ಇಡದಂತೆ ಮಾಡುತ್ತದೆ. ಒಟ್ಟಾರೆ ಸರಳ ಮಾತಿನಲ್ಲಿ ಹೇಳುವುದಾದರೆ ಜೀವನ ಆಡಿಸಿ ನೋಡು ಬೀಳಿಸಿ ನೋಡು ಆಟ ಇದ್ದಂತೆ ಅನಿಸುವದಂತೂ ಖಚಿತ. ಜೀವನ ಎರಡು ಮುಖವುಳ್ಳ ನಾಣ್ಯವಿದ್ದಂತೆ. ಒಮ್ಮೆಲೇ ಎರಡು ಮುಖಗಳೂ ಬೀಳುವ ಸಾಧ್ಯತೆ ಇಲ್ಲ. ಆದರೆ ಎರಡೂ ಮುಖಗಳು ಬೀಳುವ ಸಾಧ್ಯತೆ ಸಮವಾಗಿರುತ್ತದೆ. ಇಲ್ಲವೇ ಕಡಿಮೆ ವ್ಯತ್ಯಾಸವಿರುತ್ತದೆ. ಒಮ್ಮೆ ಏರು ಮತ್ತೊಮ್ಮೆ ಇಳುವು.ಒಮ್ಮೆ ಗೆಲುವು ಒಮ್ಮೆ ಸೋಲು. ಒಮ್ಮೆ ಕಷ್ಟ ಮತ್ತೊಮ್ಮೆ ಸುಖ. ಮನಸ್ಸು ವಿಚಿತ್ರವಾದ ತಳಮಳಗಳಿಗೆ ಒಳಗಾದಾಗ ಬದುಕು ಭಾರವೆನಿಸುತ್ತದೆ. ಹೀಗೆ ಆದರೆ ಮುಂದೆ ಹೇಗೆ ಎನ್ನುವ ಚಿಂತೆಯ ಪ್ರಶ್ನಾರ್ಥಕ ಚಿನ್ಹೆ ನಮ್ಮ ಮುಖಕ್ಕೆ ಮುಖ ಮಾಡಿಕೊಂಡು ನಿಲ್ಲುತ್ತದೆ ಅದಕ್ಕೆ ಉತ್ತರ ನೀಡುವುದು ಹೇಗೆ? ಚೆಂದದ ಗಳಿಗೆಗಳು ಜೊತೆಗಿರುವಾಗ ಹೀಗೇ ನೂರ್ಕಾಲ ಬದುಕಬೇಕು ಅನ್ನಿಸುವುದೂ ಖಚಿತ. ಸ್ವಾರಸ್ಯಕರ ಕಥೆ ಬದುಕಿನ ಏರಿಳಿತಗಳನ್ನು ಒಪ್ಪಿಕೊಳ್ಳುವ ಕುರಿತಂತೆ ಓದಿದ ಕತೆಯೊಂದು ತುಂಬಾ ಸ್ವಾರಸ್ಯಕರವಾಗಿದೆ. ನೀವೂ ಓದಿ: ಒಮ್ಮೆ ಒಬ್ಬ ರಾಜನು ಕಮ್ಮಾರನಿಗೆ ಹೀಗೆಂದು ಆದೇಶಿಸಿದನು. “ನಾನು ಮೇಲೇರುವಾಗ ನನ್ನ ಸಂತೋಷವನ್ನು ಕೂಡಿಡುವಂತೆ ಮತ್ತು ನಾನು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿಕೊಂಡಾಗ ಉತ್ಸಾಹ ಚಿಮ್ಮುವಂತೆ ಒಂದು ಸೂಕ್ತಿಯಳ್ಳ ಒಂದು ಮೊಹರನ್ನು ತಯಾರಿಸಿ ಕೊಡು.”ಎಂದ. ಕಮ್ಮಾರಿನಿಗೆ ಮೊಹರು ತಯಾರಿಸುವುದೇನು ಕಷ್ಟದ ಕೆಲಸವಲ್ಲ ಆದರೆ ಕಷ್ಟ ಮತ್ತು ಸುಖದ ಕ್ಷಣಗಳಲ್ಲಿ ಎಚ್ಚರಿಕೆಯ ಸಂದೇಶವನ್ನು ನೀಡುವ ಸೂಕ್ತಿಯನ್ನು ತಯಾರಿಸುವುದು ಕಷ್ಟವೆನಿಸಿತು. ಆದ್ದರಿಂದ ಆತ ಒಬ್ಬ ಋಷಿಯ ಬಳಿ ಹೋದ. ಋಷಿಯ ಬಳಿ ನಡೆದ ಪ್ರಸಂಗವನ್ನೆಲ್ಲ ವಿವರಿಸಿದ. ರಾಜ ಸುಖದ ಕ್ಷಣಗಳಲ್ಲಿರುವಾಗ ಸಂತಸವನ್ನು ಸಮೀಕರಿಸುವಂತೆ, ದುಃಖದ ಮಡುವಿನಲ್ಲಿರುವಾಗ ಉತ್ಸಾಹದಿಂದ ಪುಟಿದೇಳುವಂತೆ ಮಾಡುವ ಯಾವ ಸಂದೇಶವನ್ನು ಮೊಹರಿನ ಮೇಲೆ ಬರೆಯಬೇಕು? ಎಂದು ಭಿನ್ನವಿಸಿಕೊಂಡ.ಋಷಿಯು ಹೀಗೆ ಹೇಳಿದನು. ಮೊಹರಿನ ಮೇಲೆ ಹೀಗೆಂದು ಬರೆ “ಇದನ್ನೂ ದಾಟಬೇಕು” ಗೆದ್ದಾಗ ಈ ಮೊಹರನ್ನು ನೋಡಿ ವಿನೀತನಾಗುತ್ತಾನೆ. ಮತ್ತು ನಿರುತ್ಸಾಹದಲ್ಲಿ ಎದೆಗುಂದಿದಾಗ ಭರವಸೆಯ ಬೆಳಕಿನ ಕಿರಣವನ್ನು ಮೂಡಿಸುತ್ತದೆ.ಹಾವು ಏಣಿಯ ಆಟದಂತಿರುವ ಬದುಕನ್ನು ಹೇಗೆ ಒಪ್ಪಿ ಅಪ್ಪಿಕೊಳ್ಳುವುದು. ಉತ್ಸಾಹದ ಚಿಲುಮೆ ಚಿಮ್ಮಿಸುವುದು ಹೇಗೆ ನೋಡೋಣ ಬನ್ನಿ. ಮನಸ್ಥಿತಿ ಅನೇಕ ಸಲ ನಮ್ಮ ಪರದಾಟಗಳಿಗೆ ಏರಿಳಿತಗಳಿಗೆ ನಮ್ಮ ಮನಸ್ಥಿತಿ ಮುಖ್ಯ ಕಾರಣವಾಗಿ ಪರಿಣಮಿಸುತ್ತದೆ. ನಾವು ಸುಖವಾಗಿ ಇರಬೇಕೆಂದರೆ ನಮ್ಮೆದುರಿಗಿನವರನ್ನು ಸುಖವಾಗಿ ಇಡುವುದು ಮುಖ್ಯ “ನಾವು ಇತರರಿಂದ ಏನನ್ನು ಬಯಸುತ್ತೇವೆಯೋ ಅದನ್ನು ಅವರಿಗೆ ಮೊದಲು ನೀಡಬೇಕು.” ಆದರೆ ನಾವು ಇvರÀರಿಂದ ಸಹಕಾರ ಪ್ರೀತಿ ಬಯಸುತ್ತೇವೆ ಆದರೆ ನೀಡುವುದಿಲ್ಲ. ಬಹುತೇಕರು ಸ್ವಾರ್ಥ ಕೇಂದ್ರಿತರಾಗಿರುತ್ತಾರೆ ಯಾವಾಗಲೂ ತಮ್ಮ ಮೂಗಿನ ನೇರಕ್ಕೆ ಯೋಚಿಸುತ್ತಾರೆ. ಮುಂದಿನ ಹರುಷದ ಮನಗಳು ನಮಗೆ ಪ್ರಸನ್ನತೆಯನ್ನು ಮೂಡಿಸುತ್ತವೆ ಎನ್ನುವ ಪರಿಕಲ್ಪನೆಯನ್ನು ತಲೆಯಲ್ಲಿ ಇರಿಸಿಕೊಳ್ಳುವುದಿಲ್ಲ. ಅಂಥ ಮನಸ್ಥಿತಿಯಿಂದ ಬಿಡುಗಡೆ ಹೊಂದುವಂತೆ ಯಾರೂದರೂ ಉಪದೇಶಿಸಿದರೆ ಅವರ ಮುಂದೆ ಕೌಲೆತ್ತಿನಂತೆ ಗೋಣು ಹಾಕಿ ಮತ್ತೆ ಅದೇ ತಾಳ ಅದೇ ರಾಗ ಎನ್ನುವಂತೆ ಇರುತ್ತಾರೆ. ಎಂಥ ಕೆಟ್ಟವನಲ್ಲೂ ಒಂದು ಒಳ್ಳೆಯ ಗುಣ ಇದ್ದೇ ಇರುತ್ತದೆ ಎಂದು ನಂಬಬೇಕು. ಇದು ವಾಸ್ತವ ಕೂಡ. ಪ್ರತಿಯೊಂದಕ್ಕೂ ಇತರರನ್ನು ಅವಲಂಬಿಸುವ ಮನೋಭಾವವೂ ನೋವನ್ನು ತರುವುದು. ಮನಸ್ಥಿತಿ ಎನ್ನುವುದು ಫಲವತ್ತಾದ ಮಣ್ಣು ಇದ್ದಂತೆ ಅದರಲ್ಲಿ ಏನು ಬಿತ್ತುತ್ತೇವೆಯೋ ಅದನ್ನೇ ಬೆಳೆಯುತ್ತೇವೆ. ಕೋಪ ಅಸಹನೆ ಸೇಡು ತಿರಸ್ಕಾರ ಭಯದ ಬೀಜಗಳನ್ನು ಬಿತ್ತಿದರೆ ಅದೇ ಬೆಳೆಯುವುದು. ಪರಿಸ್ಥಿತಿಯನ್ನು ನಿಭಾಯಿಸುವ ಗುಣಗಳಾದ ತಾಳ್ಮೆ ಪ್ರೀತಿ ಒಲವು ಉದಾರತೆಯನ್ನು ಬಿತ್ತಿದರೆ ಬದುಕಿನಲ್ಲಿ ಕಹಿ ಪಾಲು ಕಡಿಮೆಯಾಗಿ ಸಿಹಿ ಪಾಲು ಹೆಚ್ಚುವುದು. ವಿವೇಕ ವಿವೇಚನೆ “ವಿಶ್ವ ವಿದ್ಯಾಲಯಗಳ ಆದ್ಯ ಕರ್ತವ್ಯವೆಂದರೆ ವಿವೇಕ ವಿವೇಚನೆಯನ್ನು ಕಲಿಸುವುದು. ವ್ಯಾಪಾರವನ್ನಲ್ಲ. ಯೋಗ್ಯತೆ ಸಂಪನ್ನಶೀಲತೆಯನ್ನೇ ಹೊರತು ವಿಧಿ ವಿಧಾನವನ್ನಲ್ಲ.” ಎಂದಿದ್ದಾನೆ ವಿನ್ಸ್ಟನ್ ಚರ್ಚಿಲ್ ಯಾರು ಪ್ರತಿದಿನ ಎದುರಾಗುವ ಸನ್ನಿವೇಶಗಳನ್ನು ನಿಭಾಯಿಸುತ್ತಾರೋ ಪರಿಸ್ಥಿತಿಗಳನ್ನು ಅರ್ಥೈಸಿಕೊಂಡು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೋ ಸಾಧ್ಯವಿದ್ದಷ್ಟು ತಾಳ್ಮೆಯಿಂದ ವರ್ತಿಸುತ್ತಾರೋ ಅವರನ್ನು ವಿವೇಕಿಗಳು ಎನ್ನುತ್ತಾರೆ.ಸಂಕ್ಷಿಪ್ತವಾಗಿ ಹೇಳುವುದಾದರೆ, ಬದುಕಿನ ಎಂಥ ಜಟಿಲ ಸವಾಲುಗಳಲ್ಲೇ ಆಗಲಿ ವಿವೇಕದಿಂದ ಆಯ್ಕೆ ಮಾಡುವವರು. ಯಾರು ಮೂರ್ಖತನ ಕೆಟ್ಟದ್ದು ಎಂದು ಚೆನ್ನಾಗಿ ಅರಿಯಬಲ್ಲರೋ ಅವರು ವಿವೇಕಿಗಳು. ಅತ್ಯಂತ ನಿರುತ್ಸಾಹಗೊಂಡಾಗಲೂ ಸಹನೆ ಕಳೆದುಕೊಳ್ಳದೇ ವರ್ತಿಸಬೇಕು. ಸಮಸ್ಯೆಗಳನ್ನು ಹೊಸ ದೃಷ್ಟಿಯಿಂದ ಆಲೋಚಿಸಿ ಒಳ್ಳೆಯ ಪರಿಹಾರ ಸೂಸುವುದಷ್ಟೇ ಜಾಣತನವಲ್ಲ. ಓದಿನಲ್ಲಿ ಹಿಂದೆ ಬಿದ್ದರೂ ಲೋಕಾನುಭವದಿಂದ ಚಾಕು ಚಕ್ಯತೆಯಿಂದ ಬದುಕು ನಿರ್ವಹಿಸುವುದೂ ಜಾಣತನವೇ. ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ ಅಂತ ಎಲ್ಲೆಲ್ಲೋ ಬಿದ್ದು ಸಾಯುವುದಲ್ಲ. ಜೀವನದಲ್ಲಿ ನೊಂದು ಸಾಯಲು ನಿರ್ಧರಿಸುವವನು ವಿವೇಕೆ ಅಲ್ಲವೇ ಅಲ್ಲ. ಆಸಕ್ತಿ ಹುಮ್ಮಸ್ಸು ಇರಿಸಿಕೊಂಡರೇ ಜಗತ್ತೇ ನಮ್ಮದು. ಇವೆರಡನ್ನು ಸದಾ ಹೋದಲೆಲ್ಲ ಹೊತ್ತೊಯ್ಯದರೆ ಏರಿಳಿತಗಳನ್ನು ಉತ್ತಮವಾಗಿ ನಿರ್ವಹಿಸಬಲ್ಲೆವು. ಸಂತಸದಿಂದ ಇರಬಲ್ಲೆವು. ಶ್ರದ್ಧೆ ಜೀವನದಲ್ಲಿ ಏನೇನು ಒಳ್ಳೆಯದು ಆಗಿದೆಯೋ ಅದರ ಹಿಂದೆ ಶ್ರದ್ಧೆಯ ಸಿಂಹಪಾಲಿದೆ. ಇಳಿಕೆಗಳನ್ನು ಏರುಗಳನ್ನಾಗಿ ಬದಲಿಸುವ ಮರದ ತಾಯಿಬೇರು ಶ್ರದ್ಧೆ ಆಗಿದೆ. “ಶ್ರದ್ಧೆ ಎಲ್ಲಿದೆಯೋ ಅಲ್ಲಿ ಧೈರ್ಯವಿದೆ.”ಶ್ರದ್ಧೆ ಇಲ್ಲದ ಬಲವಂತನೂ ಸೋಲುತ್ತಾನೆ. ಶ್ರದ್ಧೆ ಇರುವ ಕಡಿಮೆ ಬಲ ಇರುವವನು ಗೆಲ್ಲುತ್ತಾನೆ. ಬದುಕಿನ ಬಾಗಿಲಿನಾಚೆ ಏನಿದೆ ಯಾರಿಗೂ ಗೊತ್ತಿಲ್ಲ ಆದರೆ ಕೆಟ್ಟದ್ದನ್ನು ಬದಲಿಸುವ ತಾಕತ್ತು ಶ್ರದ್ಧೆಗಿದೆ. ಬೆವರ್ಲ ಸೀಲ್ಸ್ ಹೇಳಿದ ಮಾತು ಇಲ್ಲಿ ಸೂಕ್ತವೆನಿಸುತ್ತದೆ. “ನೀವು ವಿಫಲರಾದಲ್ಲಿ ನಿರಾಶರಾಗಬಹುದು.ಆದರೆ ಪ್ರಯತ್ನವನ್ನೇ ಮಾಡದಿದ್ದರೆ ವಿನಾಶ ನಿಶ್ಚಿತ.”ಶ್ರದ್ಧೆ ಇಲ್ಲದವನು ಏನಾದರೂ ಆಗಲಿ ಎಂದುಕೊಳ್ಳುತ್ತಾನೆ ಶ್ರದ್ಧೆ ಇರುವವನು ಅಂದುಕೊಂಡಿದ್ದನ್ನು ಸಾಧಿಸಿ ತೋರಿಸುತ್ತಾನೆ. ಅಂದರೆ ಶ್ರದ್ಧೆ ಜೀವರಸಾಯನವಿದ್ದಂತೆ. ಪ್ರತಿಕೂಲ ಪರಿಸ್ಥಿತಿಯಲ್ಲೂ ಗಟ್ಟಿಯಾಗಿ ನಿಲ್ಲುವಂತೆ ಮಾಡುತ್ತದೆ. ಬದುಕಬೇಕೆನ್ನುವ ಬೆಳೆಯಬೇಕೆನ್ನುವ ಆಸೆ ಚಮತ್ಕಾರಗಳನ್ನು ಸೃಷ್ಟಿಸಬಲ್ಲದು. ಅದೃಷ್ಟವಚಿತರೆಂದು ಗುರುತಿಸಲ್ಪಡುವವರೆಲ್ಲರೂ ಜೀವನದ ಸುಳಿಗಳಲ್ಲಿ ವೈಫಲ್ಯಗಳಲ್ಲಿ ಗಂಡಾಂತರಗಳಲ್ಲಿ ಶ್ರದ್ಧೆಯಿಂದ ಮುಂದೆ ಸಾಗಿದ್ದಕ್ಕೆ ಶ್ರದ್ಧೆ ಅವರ ಕೈ ಹಿಡಿದು ಮುನ್ನಡೆಸಿತು. ಕೋಲಂಬಸ್ ಗೆ ಹೊಸ ಜಗತ್ತನ್ನು ಕಂಡು ಹಿಡಿಯುವ ದಾರಿ ಗೊತ್ತಿರಲಿಲ್ಲ. ಆದರೆ ಅವನಲ್ಲಿದ್ದ ಬಲವಾದ ಶ್ರದ್ದೆಯೇ ಅದನ್ನು ಹುಡುಕಿಕೊಟ್ಟಿತು. ಸ್ಥಿರವಿಲ್ಲದ ಹೊಯ್ದಾಟದ ಸ್ಥಿತಿಯಲ್ಲಿ ಮುನ್ನಡೆಸುವುದು ಶ್ರದ್ಧೆ ಆದ್ದರಿಂದ ಶ್ರದ್ಧಾವಂತರಾಗುವುದು ಮುಖ್ಯ. ಸಂಕೋಚ – ಬೇಸರ ಸಂಕೋಚ ಬಹುತೇಕ ಸನ್ನಿವೇಶಗಳಲ್ಲಿ ಅಡೆತಡೆಯಾಗಿ ಪರಿಣಮಿಸುತ್ತದೆ. ಬೇರೆಯವರನ್ನು ತೃಪ್ತಿ ಪಡಿಸಲು ನಮಗೆ ಇಷ್ಟವಿಲ್ಲದ ಕೆಲಸಗಳನ್ನು ಮಾಡಬಾರದು ನಮ್ಮ ಬಗ್ಗೆ ನಮಗಿರುವ ಕೆಟ್ಟ ಅಭಿಪ್ರಾಯಗಳಲ್ಲಿ ಬೇರೆಯವರು ಆಪಾದಿಸಿದ್ದೇ ಹೆಚ್ಚು.ಅವುಗಳನ್ನು ನಿಜವಾಗಿಸಬಾರದು. ಬೇರೆಯವರಿಗೆ ಸಲಹೆ ನೀಡಿದಾಗ ಅವರು ಪಾಲಿಸದಿದ್ದರೆ ಬೇಸರ ಪಟ್ಟುಕೊಳ್ಳಬಾರದು.ನಾವು ಹೇಳಿದ್ದನ್ನೆಲ್ಲ ಜನ ಸ್ವೀಕರಿಸಬೇಕೆಂದು ಯೋಚಿಸುವುದು ತಪ್ಪು. ನಾವು ಹೇಳಿದ್ದರಲ್ಲಿ ವಿಷಯ ಇಲ್ಲದಿರಬಹುದು, ಇಷ್ಟವಾಗದೇ ಇರಬಹುದು. ಇಲ್ಲವೇ ಅವರಿಗೆ ಅರ್ಥವಾಗುವ ಹಾಗೆ ನಾವು ಹೇಳದೇ ಇರಬಹುದು. ತಪ್ಪು ಒಪ್ಪು ತಪ್ಪು ಮಾಡಿದಾಗ ಒಪ್ಪಿಕೊಂಡು ಬಿಡಬೇಕು. ತಪ್ಪುಗಳೇ ನಚಿತರ ಒಪ್ಪುಗಳನ್ನು ಮಾಡಲು ದಾರಿ ತೋರಿಸುತ್ತವೆ.ತಪ್ಪು ಮಾಡಿದಾಗ ನಮಗೆ ನಾವೇ ಭಯಂಕರ ಶಿಕ್ಷೆ ವಿಧಿಸಿಕೊಂಡು ಮೂಲೆಯಲ್ಲಿ ಕೂರಬಾರದು. ತಪ್ಪನ್ನು ತಿಳಿದುಕೊಂಡು ಒಳ್ಳೆಯ ದೃಷ್ಟಿಯಲ್ಲಿ ಒಳ್ಳೆಯ ಕೆಲಸ ಮಾಡಬೇಕು. ಚಾರ್ಲಿ ಚಾಪ್ಲಿನ್ ಚಿತ್ರಗಳಲ್ಲಿ ಆತ ಎಷ್ಟೋ ಸಲ ಬೀಳುತ್ತಿರುತ್ತಾನೆ. ಏಳುತ್ತಿರುತ್ತಾನೆ ಪೈಪು ಹಿಡಿದು ಮೇಲಕ್ಕೆ ಹತ್ತಿ ಧೊಪ್ಪೆಂದು ಕೆಳಕ್ಕೆ ಬೀಳುತ್ತಾನೆ. ಅದನ್ನು ಕಂಡು ನಾವು ಬಿದ್ದು ಬಿದ್ದು ನಗುತ್ತೇವೆ. ಯಾರೋ ಬಾಳೇ ಹಣ್ಣಿನ ಸಿಪ್ಪೆಯ ಮೇಲೆ ಕಾಲಿಟ್ಟು ಜಾರಿ ಬಿದ್ದಾಗ ಗೊಳ್ಳೆಂದು ನಗುತ್ತೇವೆ. ಅಂದರೆ ಇತರರ ಕಷ್ಟಗಳು ತೊಂದರೆಗಳು ನಮಗೆ ತಮಾಷೆ ಎನಿಸುತ್ತವೆ. ಆದರೆ ನಮ್ಮ ಬುಡಕ್ಕೆ ಬಂದಾಗ ನೋವು ತರುತ್ತವೆ. ಈ ಮನೋಭಾವವನ್ನು ಬದಲಿಸಿಕೊಳ್ಳಬೇಕು. ಕಷ್ಟಗಳಿಗೆ ಹೆದರಿ ನಮ್ಮನ್ನು ನಾವು ಶಿಕ್ಷಿಸಿಕೊಳ್ಳುವುದು ಬೇರೆಯಲ್ಲ ಇಲಿಯನ್ನು ಓಡಿಸಲು ಮನೆಗೆ ಬೆಂಕಿ ಹಚ್ಚುವುದು ಬೇರೆಯಲ್ಲ. ಎಲ್ಲ ಏರಿಳಿತಗಳಲ್ಲೂ ಗೆದ್ದು ಬದುಕಬೇಕೆನ್ನುವ ತೀವ್ರ ಆಕಾಂಕ್ಷೆ ನಮ್ಮನ್ನು ಸಂತಸದಿ ನಗೆ ಚೆಲ್ಲಿ ಬರಮಾಡಿಕೊಳ್ಳುತ್ತದೆ. ಹಾಗಾದರೆ ಆ ತೀವ್ರ ಆಕಾಂಕ್ಷೆ ನಮ್ಮದಾಗಿಸಿಕೊಳ್ಳೋಣ ಅಲ್ಲವೇ? ********************************************* ಲೇಖಕಿ ಜಯಶ್ರೀ ಜೆ ಅಬ್ಬಿಗೇರಿ ಸರಕಾರಿ ಪದವಿ ಪೂರ‍್ವ ಕಾಲೇಜಿನಲ್ಲಿ ಆಂಗ್ಲ ಭಾಷಾ ಉಪನ್ಯಾಸಕಿ . ಇವರ ಹನ್ನೆರಡು ಪುಸ್ತಕಗಳು ಪ್ರಕಟಗೊಂಡಿವೆ. ಓದು ಮತ್ತು ಬರಹ ಹಾಡುಗಾರಿಕೆ ಮಾತುಗಾರಿಕೆ ಇವರ ಹವ್ಯಾಸಗಳು

Read Post »

ಅಂಕಣ ಸಂಗಾತಿ, ಮುಖಾಮುಖಿ

ಮುಖಾಮುಖಿ ಈ ಜಗತ್ತಿನೊಂದಿಗೆ ನನ್ನ ಜಗತ್ತನ್ನ ಬೆಸೆಯುವ ತಂತು ಕವಿತೆ ಪರಿಚಯ ;ಚೈತ್ರಾ ಶಿವಯೋಗಿಮಠಮೂಲತಃ ಬಿಜಾಪುರದವರು. ಬೆಂಗಳೂರಿನ ನಿವಾಸಿ.ಎಂಟೆಕ್ ಪದವಿಯನ್ನು ವಿಟಿಯು ವಿಶ್ವವಿದ್ಯಾಲಯದಿಂದ ಪಡೆದಿದ್ದಾರೆ. ವೃತ್ತಿಯಲ್ಲಿ ಸಾಫ್ಟವೇರ್ ಇಂಜಿನಿಯರ್. ಕಾರ್ಯಕ್ರಮದ ನಿರೂಪಣೆ, ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಕವಿತೆಗಳನ್ನು ಯಾಕೆ ಬರೆಯುತ್ತೀರಿ ? ನನ್ನೊಂದಿಗೆ ನಾನು ಈ ಜಗತ್ತಿನೊಂದಿಗೆ ನನ್ನ ಜಗತ್ತನ್ನ ಬೆಸೆಯುವ ತಂತು ಕವಿತೆ. ತೀವ್ರವಾಗಿ ನನ್ನ ಮನಸ್ಸಿಗೆ ಅರ್ಥೈಸಬೇಕಾದರೆ ಅದನ್ನ ಪದಗಳಾಗಿಸಿ ನನ್ನ ಮನದಾಳಕಿಳಿಸಿಕೊಳ್ಳುತ್ತೇನೆ. ಮನೆಯನ್ನ ನಾವು ದಿನವೂ ಗುಡಿಸಿ ಶುಚಿ ಮಾಡಿದರೂ ಅದು ಮತ್ತೆ ಕಸ, ಧೂಳುಗಳಿಂದ ತುಂಬಿಕೊಳ್ಳುವುದು. ಅಂತೆಯೇ ನಮ್ಮ ಮನಸ್ಸು. ಸದ್ವಿಚಾರಗಳನ್ನ ಅದೆಷ್ಟು ಬಾರಿ ಮನಸ್ಸಿಗೆ ತಿಳಿಹೇಳಿದರೂ ಅರಿಷಡ್ವರ್ಗಗಳ ಪ್ರಭಾವ ವಲಯದಲ್ಲಿ ಸಿಲುಕಿ ಮತ್ತೆ ಕೆಡುಕಿಗೇ ತುಡಿಯುವುದು. ಕವಿತೆ, ನನ್ನ ಮನಸ್ಸಿಗೆ ನಾನೇ ಬುದ್ಧಿ ಹೇಳುವ ಮಾತುಗಳು. ಬಹುಶಃ ಇದೇ ತೊಳಲಾಟಗಳನ್ನ ಬಹುತೇಕ ಎಲ್ಲರೂ ಅನುಭವಿಸುತ್ತಾರೆ ಹಾಗಾಗಿ ನನ್ನ ಕವಿತೆಗಳು ಅವರನ್ನೂ ತಟ್ಟಿ ತಮ್ಮೊಂದಿಗೆ ತಾವು ಆಡಲಾರದ ಮಾತುಗಳನ್ನ ನನ್ನ ಕವಿತೆಗಳಲ್ಲಿ ಕಂಡರೆ ಸಾರ್ಥಕ ಭಾವ. ಕಾಣದ, ಅರಿಯದ ಯಾರಿಗೋ ಈ ಕವಿತೆಗಳು ಸಾಂತ್ವಾನವಾಗುವುವೇನೋ ಅನ್ನುವ ಆಶಾಭಾವ. ಓದಿದ ಮನಸ್ಸಿಗೆ ಅರೆಕ್ಷಣದ ಸಂತಸ, ನಿರಾಳತೆ ನೀಡಲಿ ಎನ್ನುವ ಸದುದ್ದೇಶ. ಈ ಜಗತ್ತಿನೊಂದಿಗೆ ನನ್ನ ಜಗತ್ತನ್ನ ಬೆಸೆಯುವ ತಂತು ಕವಿತೆ.   ಕವಿತೆ ಹುಟ್ಟುವ ಕ್ಷಣ ಯಾವುದು ? ನಾನು ಸ್ವಭಾವತಃ ಬಹಿರ್ಮುಖಿ ಆದರೂ ನನ್ನೊಳಗೆ ಒಬ್ಬಳು ಸೂಕ್ಷ್ಮ ಅಂತರ್ಮುಖಿ ಅಡಗಿ ಕುಳಿತ್ತಿದ್ದಾಳೆ. ಅದೆಷ್ಟೋ ಸಲ ನನಗೆ ಉಮ್ಮಳಿಸಿ ಬರುವ ಅಳು, ಆಕ್ರೋಶ,  ತಡೆಯಲಾರದಷ್ಟಾಗುವ ಖುಷಿ, ನನ್ನ ಸುತ್ತ ನಡೆಯುವ ಕೆಲವು ಘಟನೆಗಳಿಂದಾಗಿ ನನ್ನೊಳಗೇ ಹೇಳಿಕೊಳ್ಳಲಾಗದಂತಹ ತಳಮಳ. ಯಾರಿಗೆ ಹೇಳಲಿ ಎಂದು ಪರದಾಡುವಾಗಲೇ ಕವಿತೆ ಹುಟ್ಟುತ್ತದೆ. ಕೇವಲ ನನ್ನೊಳಗಿನ ನೋವು-ನಲಿವುಗಳಷ್ಟೇ ಅಲ್ಲದೆ ಸುತ್ತ ಮುತ್ತಲಿನವರ ನೋವು ನಲಿವುಗಳಿಗೆ ನನ್ನ ಸ್ಪಂದನೆಯಾದಾಗ ಹುಟ್ಟುವುದು ಕವಿತೆ. ಒಂದು ಘಟನೆ, ಒಬ್ಬ ವ್ಯಕ್ತಿ, ಒಂದು ಸಂಬಂಧ ತೀವ್ರವಾಗಿ ಕಾಡಿದಾಗ ಹುಟ್ಟುವುದು ಕವಿತೆ. ನಿಮ್ಮ ಕವಿತೆಗಳ ವಸ್ತು, ವ್ಯಾಪ್ತಿ ಹೆಚ್ಚಾಗಿ  ಯಾವುದು  ? ಪದೇ ಪದೇ ಕಾಡುವ ವಿಷಯ ಯಾವುದು ? ನಾನು ಹೆಚ್ಚಾಗಿ ಪ್ರಕೃತಿಯ ಕುರಿತಾಗೇ ಬರೆಯುವುದು. ಕಾಂಕ್ರೀಟ್ ಕಾಡಿನ ಏಕತಾನತೆ ಬೇಸರ ತರಿಸಿದಾಗೆಲ್ಲ ಒಂದು ಕಾಡಿಗಾದರೂ ಹೋಗಿ ಕುಳಿತುಬಿಡಬೇಕೆನ್ನುವ ಹಂಬಲ. ಹಸಿರು ನನ್ನನ್ನು ಹೆಚ್ಚು ಸೆಳೆಯುತ್ತದೆ. ಅಷ್ಟೇ ಅಲ್ಲದೆ ಪ್ರಸ್ತುತ ಕಾಲಮಾನದ ಕೆಲವು ಅಕ್ರಮಗಳು, ಮನುಷ್ಯರೇ ಮನುಷ್ಯರನ್ನ ಲೂಟಿ ಮಾಡುವುದು, ಈಗಿನ ವಿಷಮ ಸ್ಥಿತಿಯಲ್ಲಿನ ಮನಸ್ಥಿತಿಗಳು. ಮತ್ತು ಪದೆ ಪದೆ ಕಾಡುವುದು ಅಪ್ಪನ ನೆನಪುಗಳು.  ಕವಿತೆಗಳಲ್ಲಿ ಬಾಲ್ಯ,  ಹರೆಯ  ಇಣುಕಿದೆಯೇ ? ಬಾಲ್ಯ ಪ್ರತಿಯೊಬ್ಬರ ಜೀವನದಲ್ಲೂ ಬಹಳ ಅಪ್ಯಾಯಮಾನ. ಹಾಗೇ ನನಗೂ ಸಹ. ನನ್ನ ಬಾಲ್ಯವೆಂದರೆ ನನ್ನ ಅಪ್ಪಾಜಿ. ಅಪ್ಪನ ಕುರಿತು ಕೆಲವು ಕವನಗಳು ಬರೆದಿರುವೆ‌‌. ನನಗೆ ಭಾಷಾಭಿಮಾನ, ಓದು-ಬರಹದ ಬಗೆಗೆ ಒಲವು ಮೂಡಿಸಿದವರೇ ಅಪ್ಪಾಜಿ. ಇನ್ನು ಸಹಜವಾಗಿ ಪ್ರೀತಿ-ಪ್ರೇಮದ ಬಗೆಗೆಯೂ ಕವನಗಳನ್ನ ಬರೆದಿರುವೆ . ನೂರು ಭಾವಗಳಲ್ಲಿ ಒಲವಿನ ರಂಗು ತುಸು ಹೆಚ್ಚೇ ಆಗಿ ಕಾಣುವ ಹರೆಯದ ಪ್ರೀತಿಯ ನವಿರು ಭಾವನೆ ಮನಸ್ಸಿನಲ್ಲಿ ಪುಳಕ ಉಂಟುಮಾಡೋದರಲ್ಲಿ ಸಂದೇಹವೇ ಇಲ್ಲ! ಪ್ರಸ್ತುತ ರಾಜಕೀಯ ಸನ್ನಿವೇಶದ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು ? ಆಳುವವರು ನಿಜವಾಗಿಯೂ ಆಳುವವರಲ್ಲದೆ ಅವರು ನಮ್ಮ ಪ್ರತಿನಿಧಿಗಳಾಗಿ ಸಂವಿಧಾನ ಬದ್ಧರಾಗಿ ನಡೆದುಕೊಳ್ಳುವುದು ಅತ್ಯವಶ್ಯಕ. ಆದರೆ ಈಗ? ಬರಿ ಪಕ್ಷ, ಅವರವರ ಸ್ವಂತ ಸಿದ್ಧಾಂತಗಳು, ಜಾತಿ ರಾಜಕಾರಣ, ಧರ್ಮದ ಹೆಸರಲ್ಲಿ ರಾಜಕೀಯ, ಹಣ, ಹೆಂಡ , ವಾಮ ಮಾರ್ಗಗಳೇ ಈಗಿನ ರಾಜಕೀಯದ ಸರಕುಗಳಾಗಿವೆ. ಸರ್ವ ಜನಾಂಗದ ಶಾಂತಿಯ ತೋಟವಾಗಬೇಕಾದ ಭಾರತ ಕೇವಲ ಧರ್ಮದ ಹೆಸರಲ್ಲಿ ಗಲಭೆಗಳೇ, ಮತ್ತು ಅದರಿಂದ ಲಾಭ ಪಡೆಯುವ ರಾಜಕಾರಣಿಗಳೇ ಹೆಚ್ಚಾಗಿ ಹೋಗಿದ್ದಾರೆ. ಇವೆಲ್ಲ ಕಾರಣಗಳಿಂದಾಗಿ ರಾಜಕೀಯದ ಬಗ್ಗೆ ಬಹಳಷ್ಟು ಜಿಗುಪ್ಸೆ ಮತ್ತು ನೀರಸ ಮನೋಭಾವನೆ! ಆದರೂ ಸಣ್ಣ ಆಶಾಭಾವನೆ ಇನ್ನೂ ಇದೆ, ಈ ರಾಜಕೀಯ ಪರಿಸ್ಥಿತಿ ಸುಧಾರಣೆ ಆಗಲಿ ಅಂತ. ಧರ್ಮ ,ದೇವರು ವಿಷಯದಲ್ಲಿ ನಿಮ್ಮ ನಿಲುವೇನು ? ದಯವಿಲ್ಲದ ಧರ್ಮ ಅವುದಯ್ಯ? ಎಲ್ಲ ಧರ್ಮಗಳೂ ಹೇಳುವುದೂ ಇದನ್ನೇ. ನನಗೆ ಪ್ರತಿಯೊಂದು ಧರ್ಮದ ಬಗ್ಗೆಯೂ ಗೌರವವಿದೆ. ಒಂದು ಅಗೋಚರ ಶಕ್ತಿ ನಮ್ಮನ್ನೆಲ್ಲ ಕಾಯುತ್ತದೆಂಬ ಅಗಾಧ ನಂಬಿಕೆ ಇದೆ. ಆತ್ಮನೊಳಗೆ, ಪರಮಾತ್ಮ ಇದ್ದಾನೆ, ನಾವು ಮನಸಾರೆ ಪ್ರಬಲ ಇಚ್ಛೆಯಿಂದ ಒಳ್ಳೆಯದನ್ನು ಬೇಡಿಕೊಂಡರೆ ಖಂಡಿತವಾಗಿಯೂ ಜಗತ್ತಿನೆಲ್ಲ ಶಕ್ತಿ ಅದರೆಡೆಗೆ ಕೆಲಸ ಮಾಡಲು ಶುರುಮಾಡುತ್ತವೆ. ಅಂತೆಯೇ ಮೂಢನಂಬಿಕೆಗಳಲ್ಲಿ ಎಳ್ಳಷ್ಟು ಆಸಕ್ತಿ ಇಲ್ಲ. ದೇವರು ಖಂಡಿತವಾಗಿಯೂ ಇದ್ದಾಳೆ. ಅದು ನಮ್ಮ ತಂದೆ, ತಾಯಿ ರೂಪದಲ್ಲಿ, ಪ್ರಕೃತಿಯಲ್ಲಿ, ನಾವು ಮಾಡುವ ಒಳ್ಳೆಯ ಕೆಲಸಗಳಲ್ಲಿ, ಪ್ರೀತಿಯಲ್ಲಿ! ಈ ಜಗದ ಚೈತನ್ಯವೇ ದೇವರು ಎಂದರೆ ತಪ್ಪಾಗಲಾರದು. ಪ್ರಸ್ತುತ ಸಾಂಸ್ಕೃತಿಕ ವಾತಾವರಣದ ಬಗ್ಗೆ ನಿಮಗೆ ಏನನ್ನಿಸುತ್ತಿದೆ ? ಕೃತಕತೆ, ಅಸಹಜತೆ ಮತ್ತು ಅತಿಯಾದ ಸ್ವೇಚ್ಛೆಯೇ ಹೆಚ್ಚಾಗುತ್ತಿರುವುವೆಂಬ ಭಾವ. ಮಾತು, ಕೃತಿಗಳಲ್ಲಿನ ಅತಿಯಾದ ಸ್ವೇಚ್ಛೆಯೇ ಆಧುನಿಕತೆ ಎನ್ನುವಂತಾಗಿದೆ. ಹೊಸ ವಿಚಾರಗಳನ್ನ ಹುಟ್ಟು ಹಾಕುತ್ತ, ಹಳೆಯ ಒಳಿತುಗಳನ್ನ ಉಳಿಸಿಕೊಳ್ಳುತ್ತಾ ಸಾಗಬೇಕಾಗಿದೆ. ತೆರೆದ ಮನಸ್ಸು ಮತ್ತು ಹೃದಯವೈಶಾಲ್ಯತೆಗಳು ಬಹಳ ಕಡಿಮೆಯಾಗುತ್ತಿವೆಯೇನೋ.   ನಮ್ಮ ನಿಲುವನ್ನ ಸ್ಪಷ್ಟವಾಗಿ ಹೇಳಲೂ ಹಿಂಜರಿಕೆ, ಕಾರಣ ನಮ್ಮನ್ನ ಒಂದು ಪಂಥಕ್ಕೆ ಸೀಮಿತ ಮಾಡಿಬಿಡುತ್ತಾರೆ. ಹಂಸ ಪಕ್ಷಿಯ ಹಾಗೆ ಎಲ್ಲದರಲ್ಲೂ ಒಳಿತನ್ನ ಮಾತ್ರ ತೆಗೆದುಕೊಂಡು ಕೆಡುಕನ್ನ ಬಿಡಬೇಕು. ಹಾಗೆಯೇ ಎಲ್ಲದಕ್ಕೂ ಈಗ ಹೋರಾಡಬೇಕಾದ ಪರಿಸ್ಥಿತಿ ಬಹಳ ಚಿಂತಾಜನಕವಾಗಿದೆ. ಸಾಹಿತ್ಯ ವಲಯದ ರಾಜಕಾರಣದ ಬಗ್ಗೆ ನೀವು ಹೇಗೆ ಪ್ರತಿಕ್ರಿಯಿಸುವಿರಿ? ಇದರಲ್ಲಿ ನನಗೆ ಅನುಭವವೂ ಕಡಿಮೆ. ಕಾರಣ ನಾನು ಯಾವುದೇ ಒಂದೇ ಗುಂಪಿಗೆ ಸೇರದೆ, ಒಳ್ಳೆಯ ಮತ್ತು ಹೊಸ ಹೊಳಹುಗಳು ಎಲ್ಲಿರಿತ್ತವೋ ಅಲ್ಲಿ ನನ್ನ ಒಲವಿರುತ್ತದೆ. ಆದರೂ ಒಟ್ಟಾರೆಯಾಗಿ ನೋಡಿದಾಗ ಎಡ-ಬಲಗಳೆಂದು ಒಬ್ಬರ ಮೇಲೊಬ್ಬರು ಕೆಸರೆರಚಾಡುವುದು ಬಿಟ್ಟು ಕನ್ನಡ ಭಾಷಾ ಪರಂಪರೆಯನ್ನ ಮುಂದುವರಿಸಿಕೊಂಡು ಹೋಗಲು ಒಗ್ಗೂಡುವುದು ಅತ್ಯವಶ್ಯಕ.  ಈ ದೇಶದ ಚಲನೆಯ ಬಗ್ಗೆ ನಿಮ್ಮ ಮನಸು ಏನು ಹೇಳುತ್ತಿದೆ? ಬಹಳಷ್ಟು ಕೆಟ್ಟ ವಿಷಯಗಳನ್ನೇ ನಾವು ಕೇಳುತ್ತಿದ್ದರೂ, ನನ್ನ ಸುತ್ತಲು ಅಥವಾ ನನ್ನ ಸಂಪರ್ಕಕ್ಕೆ ಬಂದಿರುವ ಬಹಳಷ್ಟು ಯುವಮನಸ್ಸುಗಳು ಕನ್ನಡ ಭಾಷೆಯ ಒಲವು, ಬರಹ, ಸಂಚಾರ, ಸಹೃದಯಿತನವನ್ನ ತೋರುತ್ತಿದ್ದಾರೆ. ಇದು ಬಹಳಷ್ಟು ಆಶಾದಯಕ ಸಂಗತಿ ಮತ್ತು ಸಂತಸ, ಸಂತೃಪ್ತಿಯ ವಿಷಯ. ಈ ಯುವ ಚಿಗುರುಗಳಿಗೆ, ಹಿರಿಯ ಬೇರುಗಳು ತಮ್ಮ ಪ್ರೀತಿ, ಜ್ಞಾನವನ್ನ ಧಾರೆ ಎರೆದು ಕೈ ಹಿಡಿದು ನಡೆಸೋದು ಮತ್ತೊಂದು ಖುಷಿಯ ವಿಚಾರ. ಇಂತಹವರ ಸಂತತಿ ಹೆಚ್ಚಲಿ ಅನ್ನೋ ಆಶಯ. ತಾಂತ್ರಿಕ ಪ್ರಗತಿ, ಹೊಸ ಆವಿಷ್ಕಾರಗಳು ಕ್ಷಿಪ್ರಗತಿಯಲ್ಲಿದ್ದರೂ ಬಹಳಷ್ಟು ಸಾಮಾಜಿಕ ಸಮಸ್ಯೆಗಳು ಇನ್ನೂ ಉಳಿದುಕೊಂಡಿವೆ. ಅತ್ಯಾಚಾರ, ಕೊಲೆಗಳ ಸಂಖ್ಯೆ ಕಡಿಮೆಯೇ ಆಗುತ್ತಿಲ್ಲ. ಇವೆಲ್ಲ ಸಮಸ್ಯೆಗಳು ಬಗೆಹರೆಯಬೇಕೆಂದರೆ ಪ್ರತಿ ಒಬ್ಬ ವ್ಯಕ್ತಿ ಮೊದಲು ತಾನು ಸರಿಯಾಗಿ ಇರಬೇಕು. ಬಸವಣ್ಣ ಹೇಳಿದಂತೆ – “ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ”.  ಅತೀ ವೇಗದ ಮುಮ್ಮುಖದ ಚಲನೆಯೊಂದಿಗೆ, ಪ್ರೀತಿ, ಪ್ರೇಮ ಅಂತಃಕರಣದ ಗುರುತ್ವಾಕರ್ಷಣೆ ನಮ್ಮನ್ನ ಹಿಡಿದಿಡಲಿ. ಸಾಹಿತ್ಯದ  ಬಗ್ಗೆ ನಿಮ್ಮ ಕನಸುಗಳೇನು ? ನನಗೆ ಎಷ್ಟು ಸಾಧ್ಯವೋ ಅಷ್ಟೂ ಓದಬೇಕೆಂಬ ಆಸೆ. “known is drop unknown is ocean” ಎನ್ನುವಂತೆ, ಓದುವ ಪುಸ್ತಕಗಳು ಇನ್ನೂ ಬಹಳಷ್ಟಿವೆ. ಜೊತೆಗೆ ಬಹಳಷ್ಟು ಬರೆಯುವ ಕನಸಿದೆ. ನಾನು ಬರೆದದ್ದೆಲ್ಲವೂ ಅತೀ ಸುಂದರ ಅನ್ನುವಂತೆ ಇರದಿರಬಹುದು, ಆದರೆ ಮೋನಚುಗೊಳಿಸುವ ಪ್ರಯತ್ನ ಸದಾ ಜಾರಿಯಲ್ಲಿರುವುದು. ಇತ್ತೀಚೆಗೆ ಆಂಗ್ಲ ಪದ್ಯಗಳನ್ನ ಕನ್ನಡಕ್ಕೆ ತರುವ ಗೀಳು ಹತ್ತಿದೆ.  ಇದನ್ನ ಜಾರಿಯಲ್ಲಿಡುವ ಆಸೆ ಮತ್ತು ಪ್ರಯತ್ನ. ಹಾಗೆಯೇ ಕಥೆಗಳನ್ನು ಸಹ ಬರೆಯುವ ಹಂಬಲವಿದೆ. ಇಷ್ಟೇ ಸಾಹಿತ್ಯದ ಬಗ್ಗೆ ನನ್ನ ಸಧ್ಯದ ಕನಸುಗಳು. ಕನ್ನಡ  ಹಾಗೂ ಆಂಗ್ಲ ಭಾಷೆಯ ಸಾಹಿತ್ಯದಲ್ಲಿ ನಿಮ್ಮ ಇಷ್ಟದ ಹಾಗೂ ಕಾಡಿದ ಕವಿ, ಸಾಹಿತಿ  ಯಾರು ? ನಾನು ಬೆಳೆದ ಪರಿಸರ ಹೆಚ್ಚಾಗಿ ಶರಣರ ಸಂಸ್ಕೃತಿ ಮತ್ತು ವೈಚಾರಿಕತೆಯ ಪ್ರಭಾವದಲ್ಲಾದ್ದರಿಂದ ಸಹಜವಾಗಿ ಅಕ್ಕನ, ಅಣ್ಣನ ವಚನಗಳು ನನ್ನನ್ನು ಚಿಂತನೆಗೆ ಹಚ್ಚುವವು ಹಾಗೂ ಹೆಚ್ಚು ಆಪ್ತ ಎನಿಸುವಂತಹವು. ನನಗೆ ಕನ್ನಡದಲ್ಲಿ ಕಾಡುವ ಕವಿ ಕುವೆಂಪು.ಬೇಂದ್ರೆಯವರ ಪದ್ಯಗಳು . ಕಾರಂತರು, ಪೂರ್ಣಚಂದ್ರ ತೇಜಸ್ವಿ. ಆಂಗ್ಲದಲ್ಲಿ ಖಲೀಲ್ ಗಿಬ್ರಾನ್ ನ ಪದ್ಯಗಳು . ಈಚೆಗೆ ಓದಿದ ಕೃತಿಗಳಾವವು? ಇತ್ತೀಚೆಗೆ ಓದಿದ ಕೃತಿಗಳೆಂದರೆ: ಪೂರ್ಣಚಂದ್ರ ತೇಜಸ್ವಿಯವರ ಕರ್ವಾಲೋ,  ಇನ್ನೂ ಕವನ ಸಂಕಲನಗಳನ್ನ ಇಡಿಯಾಗಿ ಓದುವುದಕ್ಕಿಂತ ಬಿಡಿ ಬಿಡಿಯಾಗಿ ಓದುವುದೇ ಬಹಳ ಇಷ್ಟ. ಎಂ.ಆರ್ ಕಮಲ ಅವರ ನೆತ್ತರಲ್ಲಿ ನೆಂದ ಚಂದ್ರ, ಕುವೆಂಪುರವರ ಕೊಳಲು ಈ ಕವನ ಸಂಕಲನಗಳಿಂದ ಒಂದಷ್ಟು ಕವಿತೆಗಳನ್ನ ಆಗಾಗ ಓದುತ್ತಿದ್ದೇನೆ. ಓದುವ ಪಟ್ಟಿಯಲ್ಲಿ ಇನ್ನೂ ಬಹಳಷ್ಟು ಪುಸ್ತಕಗಳ ದೊಡ್ಡ ಪಟ್ಟಿಯೇ ಇದೆ. ನಿಮಗೆ ಇಷ್ಟವಾದ ಕೆಲಸ ಯಾವುದು? ಓದು ಬರಹಗಳೊಂದಿಗೆ, ನನಗೆ ಪತಿಯೊಂದಿಗೆ ಹೊಸ ಸ್ಥಳಗಳಿಗೆ ಭೇಟಿ ಕೊಡುವುದು, ಹಳೆಯ ವಾಸ್ತುಶಿಲ್ಪದ ಕಲಾಗುಡಿಗಳಿಗೆ ಹೋಗುವುದು, ಹಸಿರು, ಕಾಡು, ಬೆಟ್ಟ, ಝರಿಗಳಿಗೆ ಹೋಗಿ ಸುತ್ತಾಡಿ ಪ್ರಕೃತಿಯನ್ನ ಮನಸಾರೆ ಸವಿಯುವುದು. ಹಾಗೆಯೇ ನನ್ನ ಪುಟಾಣಿ ಮಗಳಿಗೆ ಪದ್ಯಗಳನ್ನ ಹೇಳಿಸುವುದು ಇಷ್ಟದ ಕೆಲಸದಲ್ಲೊಂದು!  ನಿಮಗೆ ಇಷ್ಟವಾದ ಸ್ಥಳ ಯಾವುದು ? ಇಂತಹದೇ ಎಂದು ಕಡ್ಡಿ ಕೊರೆದು ಹೇಳುವುದು ಕಷ್ಟ. ಎಲ್ಲಿ ಪ್ರೀತಿ ಅಂತಃಕರಣ ತುಂಬಿರುವುದೋ, ಎಲ್ಲಿ ಅಮ್ಮ ಇರುವಳೋ, ಎಲ್ಲಿ ಹಸಿರಿರುವುದೋ ಆ ಸ್ಥಳಗಳೆಲ್ಲವೂ ಇಷ್ಟವೇ! ನಿಮ್ಮ ಪ್ರೀತಿಯ, ತುಂಬಾ ಇಷ್ಟ ಪಡುವ  ಸಿನಿಮಾ ಯಾವುದು? ನನಗೆ ಬಹಳ ಇಷ್ಟವಾಗುವ ಸಿನಿಮಾಗಳು ಬಹಳಷ್ಟಿವೆ. ಡಾ.ರಾಜ್ ಕುಮಾರ್ ಅವರ ಎಲ್ಲ ಸಿನಿಮಾಗಳೂ ಇಷ್ಟವಾಗುತ್ತವೆ. ಅವರ ಸಿನಿಮಾಗಳಲ್ಲಿ ಮಾನವೀಯ ಮೌಲ್ಯಗಳು, ಪ್ರೀತಿ ಇಂತಹ ಅನೇಕ ಭಾವನಾತ್ಮಕ ಅಂಶಗಳೇ ಹೆಚ್ಚು. ಇತ್ತೀಚೆಗೆ ರಮೇಶ್ ಅರವಿಂದ್ ಅವರ ಶಿವಾಜಿ ಸುರತ್ಕಲ್ ಬಹಳಷ್ಟು ರೋಮಾಂಚನಕಾರಿ ತಿರುವುಗಳ ಚಿತ್ರ ಇಷ್ಟವಾಯ್ತು. ನೀವು ಮರೆಯಲಾರದ‌ ಘಟನೆ‌ ಯಾವುದು? ನನ್ನ ತಂದೆ ಅಕಾಲದಲ್ಲಿ ಇಹವನ್ನ ತ್ಯಜಿಸಿದ ಘಟನೆ ನಾನೆಂದಿಗೂ ಮರೆಯಲಾಗದ ಅತ್ಯಂತ ನೋವಿನ ಘಟನೆ. ಹಾಗೇ ನನ್ನ ಮಗಳು ಹುಟ್ಟಿದ ದಿನ ನಾನೆಂದಿಗೂ ಮರೆಯಲಾಗದ ಅತೀ ಸಂತಸದ ಕ್ಷಣ. ಹಾಗೆಯೇ ಶಾಲಾ ಕಾಲೇಜು ದಿನಗಳಲ್ಲಿ ಕ್ಲಾಸ್ ಬಿಟ್ಟು ಹೆಚ್ಚಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದ್ದು ಬಹಳಷ್ಟು ನೆನಪನಲ್ಲಿರುತ್ತದೆ. ****************************************************** ಹರಪನಹಳ್ಳಿ ಹುಟ್ಟೂರು. ಹರಪನಹಳ್ಳಿ ತಾಲೂಕಿನ ಮೈದೂರು-ಚಿಗಟೇರಿ ಬೆಳೆದ ಊರು. ಪಿಯು ಓದಿದ್ದು ಕೊಟ್ಟೂರಿನಲ್ಲಿ. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿ.ಎ., ಕವಿವಿಯಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ. ದಾವಣಗೆರೆ, ಸದಾಶಿವಗಡ ಮತ್ತು ಭಟ್ಕಳದಲ್ಲಿ ಕನ್ನಡ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿ, 1997 ರಿಂದ ಕಾರವಾರದಲ್ಲಿ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಜನವಾಹಿನಿ, ಜನಾಂತರಂಗ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಇವರು, ಈ ಟಿವಿ ಕನ್ನಡ ನ್ಯೂಸ್ ಚಾನೆಲ್ಲಿಗೆ ವರದಿಗಾರಿಕೆ ಬಳಿಕ ಈಗ ಉದಯವಾಣಿ , ಬೆಳಗಾವಿಯ ಲೋಕದರ್ಶನ ಪತ್ರಿಕೆಗೆ ವರದಿಗಾರರಾಗಿದ್ದಾರೆ. 2009ರಲ್ಲಿ ‘ಕಡಲದಂಡೆಗೆ ಬಂದ ಬಯಲು’ ಎಂಬ ಕಥಾ ಸಂಕಲನ, 2013ರಲ್ಲಿ ‘ಬಿಸಿಲ ಬಯಲ ಕಡಲು’ ಎಂಬ ಕವಿತಾ ಸಂಕಲನ ಪ್ರಕಟಣೆ.2019 ರಲ್ಲಿ ‘ವಿರಹಿದಂಡೆ’ ಕವಿತಾ ಸಂಕಲನ ಪ್ರಕಟಿಸಿದ್ದಾರೆ. ಕಾರವಾರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.‌

Read Post »

You cannot copy content of this page

Scroll to Top