ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ಜೀವನ

ಲೆಕ್ಕಕ್ಕೊಂದು ಸೇರ್ಪಡೆ

ಲೇಖನ ಲೆಕ್ಕಕ್ಕೊಂದು ಸೇರ್ಪಡೆ ಶಾಂತಿ ವಾಸು ಚೀನಿಯರ ಕೆಟ್ಟ ಮನಸ್ಥಿತಿಯ ಕನ್ನಡಿ ಕೊರೊನ, ಭಾರತವನ್ನು ಪ್ರವೇಶಿಸುವ ಮೊದಲೇ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದ, ಸಂಪೂರ್ಣ ದೇಹವನ್ನು ಅದೇನೋ ಹೊಸತರಹದ ದಿರಿಸಿನಿಂದ ಮುಖಸಹಿತ ಮುಚ್ಚಿಕೊಂಡ ಜನರು ಪ್ಲಾಸ್ಟಿಕ್ ಚೀಲದಲ್ಲಿ ಬಿಗಿಯಾಗಿ ಸುತ್ತಿದ ನೂರಾರು ಜನರ ಮೃತದೇಹಗಳನ್ನು ಒಟ್ಟೊಟ್ಟಿಗೇ, ಆಳವಾದ ಒಂದೇ ಹಳ್ಳದಲ್ಲಿ ಹಾಕಿ ಮಣ್ಣು ಮುಚ್ಚುವುದು ಹಾಗೂ ಪೆಟ್ರೋಲ್ ಸುರಿದು ಸಾಮೂಹಿಕವಾಗಿ ಸುಡುವುದನ್ನು ನೋಡಿಯೇ ಪ್ರಪಂಚವು ನಡುಗಿಹೋಗಿತ್ತು. ಇದೇನು?? ಹೊಸದಾಗಿ ನಡೆದದ್ದೇ? ಅಥವಾ ಯಾವುದಾದರೂ ಸಿನಿಮಾಗಾಗಿ ಇರಬಹುದೇನೋ ಎಂದು ಗೊಂದಲಗೊಂಡ ಕೋಟ್ಯಂತರ ಭಾರತೀಯರಲ್ಲಿ ನಾನೂ ಒಬ್ಬಳು. ನಂತರದ ದಿನಗಳಲ್ಲಿ ಗುಂಪುಗುಂಪಾಗಿ ಚೀನೀ ಜನರು ನಿಂತಲ್ಲಿಯೇ ಹುಳುಗಳಂತೆ ಮುದುರಿ ಬೀಳುವ ದೃಶ್ಯವನ್ನು ಮಾಧ್ಯಮಗಳಲ್ಲಿ ತೋರಿಸಲಾಯಿತು. ಇದನ್ನು ಕಂಡ ನಮ್ಮನ್ನು ಹೆಚ್ಚಾಗಿ ಕಾಡಿದ್ದೆಂದರೆ, ಬಿದ್ದವರನ್ನು ಗಮನಿಸುವುದಾಗಲೀ ಏನಾಯಿತೆಂದು ತಿರುಗಿಯೂ ನೋಡುವ ವ್ಯವಧಾನವೋ ಕರುಣೆಯೋ ಇಲ್ಲದವರಂತೆ ಭಾವನಾರಹಿತರಾಗಿ ಓಡಾಡುತ್ತಿದ್ದ ಮಾಸ್ಕ್ ಧರಿಸಿದ ಚೀನಾ ಜನರ ಹೃದಯಹೀನತೆ. ಆಸ್ಪತ್ರೆಯ ದೃಶ್ಯಗಳಲ್ಲಿ ವೆಂಟಿಲೇಟರ್ ಹಾಕಿದ್ದರೂ ಉಸಿರಾಡಲು ಕಷ್ಟಪಡುವ ರೋಗಿಗಳ ನರಳಾಟ ಎಂಥಹವರ ಕಣ್ಣಲ್ಲೂ ನೀರು ತರಿಸುವಂತಿತ್ತು. ಕೊರೊನ ಎಂಬ ಹೊಸ ಖಾಯಿಲೆಯಿಂದ ಸಾವಿರಾರು ಸಂಖ್ಯೆಯ ಜನರು ಬೀದಿ ಹೆಣಗಳಾಗುತ್ತಿದ್ದಾರೆಂದೂ ಅವರನ್ನೆಲ್ಲಾ ಸಾಮೂಹಿಕವಾಗಿ ಹೂಳುತ್ತಿದ್ದಾರೆಂಬುದನ್ನೂ ನಾವೆಲ್ಲಾ ಅರಗಿಸಿಕೊಳ್ಳುವಷ್ಟರಲ್ಲಿ ನಮ್ಮೆಲ್ಲರ ಮಧ್ಯೆ ತನ್ನ ಕದಂಬಬಾಹುಗಳನ್ನು ಚಾಚಲು ಪ್ರಾರಂಭಿಸಿಯೇ ಬಿಟ್ಟಿತ್ತು ಅದೇ ಚೀನಾದ ಅನಾಮಿಕ ವೈರಸ್.. ಭೂಮಿಯ ಮೇಲಿನ ಪ್ರತಿಯೊಬ್ಬ ಮನುಷ್ಯರ ಜೀವನದಲ್ಲೂ ಪ್ರಬಲ ಬದಲಾವಣೆ ತಂದ ಈ ವೈರಸ್ ಇಲ್ಲಿಯ ತನಕ ಲಕ್ಷಾಂತರ ಮಂದಿಯ ಪ್ರಾಣವನ್ನು ಬಲಿ ಪಡೆದಿದೆ. ಹಾಗೂ ಇನ್ನೂ ಮುಂದುವರೆಯುವ ಲಕ್ಷಣಗಳು ನಿಚ್ಚಳವಾಗಿವೆ.. ಪ್ರತಿ ಧರ್ಮದವರೂ ಅವರವರದೇ ರೀತಿಯಲ್ಲಿ ಅಂತ್ಯಸಂಸ್ಕಾರವನ್ನು ನೆರವೇರಿಸಿ ಮೃತರ ಆತ್ಮವನ್ನು ಅಂತರಾತ್ಮನಲ್ಲಿ ವಿಲೀನಗೊಳಿಸುವ ಶ್ರೇಷ್ಠಪದ್ಧತಿಯನ್ನು ರೂಢಿಸಿಕೊಂಡು ಬಂದ ನಮ್ಮ ಭಾರತದಂತಹ ಪುಣ್ಯಭೂಮಿಯಲ್ಲಿ ಬದುಕಿದ ಮನುಷ್ಯರು ಬೀದಿ ಹೆಣಗಳಾಗಿಸುವುದನ್ನೂ, ಸತ್ತವರನ್ನು ದರದರನೇ ಎಳೆದೊಯ್ದು ಎತ್ತಿ ಹಳ್ಳಕ್ಕೆ ಬಿಸಾಡುವುದನ್ನು ಎಂದಿಗೂ ಯಾರೂ ಕಲ್ಪಿಸಿಯೂ ಇರಲಾರರು. ನಮ್ಮ ಸಂಸ್ಕೃತಿಯಲ್ಲಿಲ್ಲದ ಅನೇಕ ವಿಷಯಗಳಲ್ಲಿ ಅನ್ಯರನ್ನು ಅನುಸರಿಸುತ್ತಿರುವ ನಾವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮನುಷ್ಯರ ಸಂಸ್ಕಾರವನ್ನೂ ಅಮಾನುಷ್ಯವಾಗಿ ನಡೆಸಿಬಿಟ್ಟೆವು. ತನ್ನ ದೇಹಕ್ಕೆಂಥಹ ಅವಮಾನವಾಗುತ್ತಿದೆ ಎಂದು ಮೃತರಿಗೆ ತಿಳಿಯುವುದಿಲ್ಲವಾಗಲೀ, ಹತ್ತಿರ ಸುಳಿಯಲು ಅವಕಾಶವಿಲ್ಲದೆ ದೂರದಲ್ಲಿ ನಿಂತು ನೋಡುತ್ತಿರುವ ಸಂಬಂಧಿಕರು ಅಥವಾ ಮಾಧ್ಯಮಗಳಲ್ಲಿ ಗಮನಿಸುತ್ತಿದ್ದ ಸಾರ್ವಜನಿಕರಲ್ಲಿ ಎಂಥ ಭಾವನೆ ಹಾಗೂ ಭಯ ಹುಟ್ಟಿಸುತ್ತಿವೆ ಎಂದು ಯಾರೂ ಗಣನೆಗೆ ತೆಗೆದುಕೊಳ್ಳಲಿಲ್ಲ. ಮೋದಿ ಬೇಕಾ ಮನಮೋಹನ್ ಸಿಂಗ್ ಬೇಕಾ ಎಂದು ಕೇಳಿ, ಒಂದನ್ನು ಒತ್ತಿ ಎರಡನ್ನು ಒತ್ತಿ ಎನ್ನುತ್ತಾ, ಮುಂದಿನ ಪ್ರಧಾನಿ ಯಾರೆಂಬ ದೊಡ್ಡ ಸಮೀಕ್ಷೆಯನ್ನು ಸರಳವಾಗಿ ಸದ್ದಿಲ್ಲದೇ ನಡೆಸಿ ನಿಂತಗಳಿಗೆಯಲ್ಲಿಯೇ ಮುಂದಿನ ಪ್ರಧಾನಿ ಯಾರೆಂದು ನಿಖರತೆ ಸಾರುವ ಆಪ್ಗಳು(app), ಕೇವಲ ಒಂದು ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ ಎಷ್ಟು ಹಾಸಿಗೆಗಳು ಉಳಿದಿವೆ, ಕೋವಿಡೇತರ ರೋಗಿಗಳು ಯಾವ ಆಸ್ಪತ್ರೆಯನ್ನು ಎಡತಾಕಬೇಕು ಎಂಬ ವಿವರ ಒದಗಿಸುವುದನ್ನು ನಿರಾಕರಿಸುತ್ತಿವೆ ಏಕೆ?? ಪ್ರಮಾದಗಳನ್ನು ತಡೆಯಲಾಗದ ಇಚ್ಚಾಶಕ್ತಿಯ ಕೊರತೆ, ಕೊರೊನಾದಿಂದ ಧಿಡೀರನೆ ವ್ಯಕ್ತಿಯನ್ನು ಕಳೆದುಕೊಂಡ ದುಃಖ, ಮುಂದೇನು ಎಂದು ದಿಕ್ಕುತೋರದೆ ಚಿಂತೆಗೊಳಗಾದ ಕುಟುಂಬಸ್ಥರಿಗೆ, ಕೊನೆಪಕ್ಷ ಮೃತರ “ಮರ್ಯಾದಾ ಶವಸಂಸ್ಕಾರ”ದ ಭರವಸೆ ನೀಡುವಲ್ಲಿ ವಿಫಲವಾಯಿತು. ಸಾರ್ವಜನಿಕರಾದ ನಾವು ಅರಿತಿರಲೇಬೇಕಾದ ವಿಷಯವೆಂದರೆ ಯಾವುದೇ ಪಕ್ಷವಾಗಲಿ ಪ್ರಜಾಪ್ರಭುತ್ವದಲ್ಲಿ ಹಲವರು ಆಶಿಸಿದಂತೆ ಆಳಲು ಬರುವ ಜನನಾಯಕರ ಪ್ರಭುತ್ವವನ್ನೇ, ಆಯ್ಕೆ ಮಾಡದವರೂ ಸಹಾ ಒಪ್ಪಿಕೊಳ್ಳಬೇಕಾಗುತ್ತದೆ. ನಾವು ಆರಿಸಿದ ವ್ಯಕ್ತಿಯು ನಮ್ಮನ್ನು ಅವರಾಯ್ಕೆಯ ಹಲವರ ಅಧೀನಕ್ಕೆ ತಳ್ಳಿಬಿಡುವ ಸತ್ಯವನ್ನು ನಾವು ಅರಿಯುವಷ್ಟರಲ್ಲಿ ಕಾಲ ಮಿಂಚಿರುತ್ತದೆ. ಎಲ್ಲಕ್ಕಿಂತ ಮಿಗಿಲಾಗಿ, ಕೊರೊನಾದಂತಹ ಲೋಕವ್ಯಾಪಿ ಸಮಸ್ಯೆಯ ಸನ್ನಿವೇಶವನ್ನೆದುರಿಸಿದ ಯಾವುದೇ ಜನರು ನಮ್ಮ ಮಧ್ಯೆ ಇಲ್ಲ. ನಮ್ಮ ದೇಶದ್ದಲ್ಲದ ಹಂತಕ ವೈರಸ್ಸಿನ ದಮನ ಮಾಡುವ ಔಷಧ ಬರುವ ತನಕ ಸಾರ್ವಜನಿಕರಾದ ನಮ್ಮ ಜವಾಬ್ದಾರಿಯೂ ದೊಡ್ಡದಿದೆ. ಆದರೆ ಅದನ್ನು ಸರಳಗೊಳಿಸಿಕೊಂಡು,ಆದಷ್ಟು ಮನೆಯಲ್ಲಿರುವುದು, ಹೊರಹೋಗುವಾಗ ಮೂಗುಬಾಯಿ ಮುಚ್ಚುವ ಮಾಸ್ಕ್ ಧರಿಸುವುದು, ಸೋಪಿನಿಂದ ಆಗಾಗ ಕೈಗಳನ್ನು ತೊಳೆಯುವುದರಿಂದ ಕೊರೊನ ತಡೆಯಬಹುದೆಂದಾದರೆ, ಇವೆಲ್ಲವನ್ನು ಅನುಸರಿಸಿ ಹೊಸ ಔಷದಕ್ಕೆ ಪ್ರಯೋಗ ಶಿಶುವಾಗುವುದನ್ನು ಹಾಗೂ ಸರ್ಕಾರೀ ಲೆಕ್ಕ ಪುಸ್ತಕದ ಖಾಯಿಲೆಗೋ ಅಥವಾ ಸಾವಿಗೋ ನಾವು ಒಂದು ಸಂಖ್ಯೆಯಾಗುವುದನ್ನು ತಪ್ಪಿಸಬಹುದು. ***********************

ಲೆಕ್ಕಕ್ಕೊಂದು ಸೇರ್ಪಡೆ Read Post »

ಪುಸ್ತಕ ಸಂಗಾತಿ

ಬೊಗಸೆ ತುಂಬಾ ಕನಸು

ಪುಸ್ತಕ ಪರಿಚಯ ಬೊಗಸೆ ತುಂಬಾ ಕನಸು ಬೊಗಸೆ ತುಂಬಾ ಕನಸುಲೇಖಕರು: ಡಾ. ಬಿ. ಪ್ರಭಾಕರ ಶಿಶಿಲ ಸುಳ್ಯ)ಪ್ರಕಾಶಕರು: ರಾಜ್ ಪ್ರಕಾಶನ, ಮೈಸೂರುಪುಟಗಳು: 688ಬೆಲೆ: 650 ರೂಪಾಯಿಗಳು ಸ್ವಾತಂತ್ರ್ಯ ಎಂಬುದು ದೇವರಿಗಿಂತ ದೊಡ್ಡ ಮೌಲ್ಯ! –  ಡಾ| ಪ್ರಭಾಕರ ಶಿಶಿಲ ಒಂದಾನೊಂದು ಕಾಲದಲ್ಲಿ ಚಂದ್ರಾವತಿ. ಬಿ ಆಗಿ ಬದುಕುತ್ತಿದ್ದ ನನ್ನನ್ನು ಚಂದ್ರಾವತಿ ಬಡ್ಡಡ್ಕ ಆಗಿಸಿದ್ದು ನಮ್ಮ ಅರ್ಥಶಾಸ್ತ್ರ ಉಪನ್ಯಾಸಕರಾದ ಮಾನ್ಯ ಡಾ| ಪ್ರಭಾಕರ ಶಿಶಿಲ ಸರ್. ನಮ್ಮ ಕಾಲೇಜು ದಿನಗಳ ವೇಳೆಯಲ್ಲಿ, ಸ್ವಂತಿಕಾ ಪ್ರಕಾಶನದಿಂದ ಪುಸ್ತಕ ಪ್ರಕಟವಾಗುವ ವೇಳೆ, ಅದರ ಸದಸ್ಯರ ಪಟ್ಟಿಯಲ್ಲಿ ನಮ್ಮನ್ನೆಲ್ಲ ಸೇರಿಸಿದ್ದರು. ಅಲ್ಲಿ ನಾನು, ನನ್ನನ್ನೇ ನಾನು ಚಂದ್ರಾವತಿ ಬಡ್ಡಡ್ಕ ಅಂತ ಕಂಡು ಖುಷಿಗೊಂಡಿದ್ದೆ-ಪುಳಕಿತಳಾಗಿದ್ದೆ. ಅಲ್ಲಿಂದ ಖಾಯಂ ಆಗಿ ಬಡ್ಡಡ್ಕ ನಾನು ಹೋದಲ್ಲೆಲ್ಲ ನನ್ನ ಹೆಸರಿನ ಜೊತೆಗಿದೆ. * ಸದ್ರೀ ಶಿಶಿಲರ ಆತ್ಮ ಕಥನ ‘ಬೊಗಸೆ ತುಂಬಾ ಕನಸು’. ದಣಿವರಿಯದ, ದಣಿವಿಲ್ಲದ ಬರಹಗಾರರಾಗಿರುವ ಶ್ರೀಯುತರ ಈ ಕನಸನ್ನು ಇತ್ತೀಚೆಗೆ ಓದಿದಾಗ ಒಂದೆರಡು ಮಾತು ಬರಿಯೋ ತುಡಿತ ಒದ್ದುಕೊಂಡು ಬಂದಿತ್ತು. ಇನ್ನೇನೋ ಕೆಲಸಕಾರ್ಯಗಳಲ್ಲಿ ನಿರತಳಾಗಿ ಬಿದ್ದು ಹೋಗಿದ್ದರಿಂದ ಮೀನಾ-ಮೇಷಾವಾಗಿ ಇಂದಿಗೆ ಬಂದು ನಿಂತಿದೆ. ಪುಸ್ತಕ ಬಿಡುಗಡೆಯ ಬಳಿಕ ಸುಳ್ಯದ ಶ್ರೀದೇವಿ ಪುಸ್ತಕ ಮಳಿಗೆಯಲ್ಲಿ ಪುಸ್ತಕ ಲಭ್ಯವಿದೆ ಎಂದು ಗೊತ್ತಾದ ತಕ್ಷಣ ಹೋಗಿ ಪುಸ್ತಕ ‘ಕೊಂಡು’ ತಂದಿದ್ದೆ (ಇದನ್ನು ಯಾಕೆ ಒತ್ತಿ ಹೇಳುತ್ತೇನೆಂದರೆ ಕಾಲೇಜು ದಿನಗಳಿಂದಲೇ ಅವರ ಧ್ಯೇಯವಾಕ್ಯ ‘ಪುಸ್ತಕ ಕೊಂಡು ಓದಿ’ ಕಿವಿಗೆ ಬೀಳುತ್ತಲೇ ಇತ್ತಲ್ಲ). ಹೀಗೆ ಕೊಂಡು ತಂದ ಬಳಿಕ, ಬೇರೆ ಕೆಲಸಗಳೊಂದಿಗೇ 688 ಪುಟಗಳ ಬೃಹತ್ ಪುಸ್ತಕವನ್ನು ನಾಲ್ಕೈದು ದಿನಗಳಲ್ಲಿ ಮಧ್ಯರಾತ್ರಿಯ ತನಕವೂ ಕುಳಿತು, ನಿಂತು, ಒರಗಿ, ಅಡ್ಡಬಿದ್ದು ಗಬಗಬ ಓದಿ ಮುಗಿಸಿದ್ದೆ. ಪುಸ್ತಕದಲ್ಲಿ ಬರುವ ಕೆಲವು ಪಾತ್ರಗಳನ್ನು, ಕ್ಷಣಗಳನ್ನು ನಾನು ಲೈವ್ ಆಗಿ ಕಂಡಿದ್ದೇನೆ ಮತ್ತು ಬೆರೆತಿದ್ದೇನೆ. ಇನ್ನು ಕೆಲವು ಚಿರಪರಿಚಿತ, ಮತ್ತೆ ಹಲವು ಅರೆ ಪರಿಚಿತ ಮತ್ತು ಬಹಳವು ಅಪರಿಚಿತ. ಅಗಾಧವಾದ ಈ ಪುಸ್ತಕವನ್ನು ಓದಿ ಕೆಳಗಿರಿಸಿದಾಗ ಮನದಲ್ಲಿ ನನಗೆ ಅಬ್ಬಾಬ್ಬಾ ಎಂಬ ಉದ್ಗಾರ ಹೊರಡಿಸದಿರಲಾಗಲಿಲ್ಲ. ಇದರಲ್ಲಿನ ಜೀವನ ಕಥನ ಹಾಗಿದೆ. ಕುಂಡಪ್ಪ, ಸುಬ್ಬಪ್ಪನಾಗದೆ ಪ್ರಭಾಕರನಾಗಿ ಪ್ರಭೆಯನ್ನು ಬೀರಬೇಕು ಎಂಬ ಅವರ ಅಮ್ಮನ ಕನಸನ್ನು ನನಸಾಗಿಸಿದ್ದಾರೆ. ಅಂತೆಯೇ ಆರಂಭದಲ್ಲೇ ಹೇಳುತ್ತಾರೆ, ಅಜ್ಜಿ ನನಗೆ ಕನಸು ಕಾಣಲು ಕಲಿಸಿದರು; ನಾನು ಕನಸು ಕಾಣತೊಡಗಿದೆ. ಕನಸುಗಳನ್ನು ಸಾಕ್ಷಾತ್ಕರಿಸಲು ಯತ್ನಿಸಿದೆ. ಕನಸುಗಳಲ್ಲೇ ಜೀವಿಸಿದೆ. ಈಗಲೂ ಕನಸು ಕಾಣುತ್ತಿದ್ದೇನೆ! ಅದನ್ನೇ ನಿಮಗೆ ಕೊಡುತ್ತಿದ್ದೇನೆ, ಬೊಗಸೆ ತುಂಬಾ ಕನಸು! ಅನ್ನುತ್ತಾ ತಮ್ಮ ಬಾಲ್ಯದಿಂದ ಹಿಡಿದು ಕಳೆದ ವರ್ಷ ಪುಸ್ತಕ ಪ್ರಕಟಗೊಳ್ಳುವ ತನಕದ ತಮ್ಮ ಅಗಾಧವಾದ ಜೀವನಾನುಭವಗಳನ್ನು ಅಕ್ಷರಗಳಲ್ಲಿ ಕಟ್ಟಿಕೊಟ್ಟಿದ್ದಾರೆ. ಬಿಕಾಂ ವಿದ್ಯಾರ್ಥಿನಿಯಾಗಿ ನೆಹರೂ ಸ್ಮಾರಕ ಮಹಾವಿದ್ಯಾಲಯಕ್ಕೆ ಸೇರುವ ಮುನ್ನ ಶಿಶಿಲ ಸರ್ ಅವರನ್ನು ನಾನು ನೋಡಿರಲಿಲ್ಲ. ಆದರೆ, ಅವರ ಬಗ್ಗೆ ಕೇಳಿದ್ದೆವು. 80ರ ದಶಕದಲ್ಲಿ ಸುಳ್ಯದಂತ ಚಿಕ್ಕ ಊರಲ್ಲಿ ಅಂತರ್ಧರ್ಮೀಯ ವಿವಾಹವಾಗಿದ್ದ ಅವರು ಹಲವರಿಗೆ ಹಲವು ಭಾವಗಳಲ್ಲಿ ಬಿಂಬಿತವಾಗಿದ್ದರು. ಹಲವಾರು ಕೃತಿಕರ್ತ, ಯಕ್ಷಗಾನ ಪಾತ್ರಧಾರಿ ಎಲ್ಲವೂ ಆಗಿದ್ದ ಅವರ ಬಗೆಗೆ ಎನ್ನೆಂಸಿ ಸೇರುವಾಗ ಒಂದು ಬೆರಗಿತ್ತು. ಅದಲ್ಲದೆ, ನಾನು ಅ..ಆ..ಇ..ಈ ಕಲಿತ ಬಡ್ಡಡ್ಕ ಶಾಲೆಯ ಸಂಸ್ಥಾಪಕರಾದ, ಅಪ್ರತಿಮ ಈಡುಗಾರರೂ ಆಗಿದ್ದ ದಿ| ಬಡ್ಡಡ್ಕ ಅಪ್ಪಯ್ಯಗೌಡರ ಬೇಟೆಯ ಅನುಭವದ ಕುರಿತ ‘ಶಿಕಾರಿಯ ಸೀಳುನೋಟ’ ಪುಸ್ತಕ ಬರೆದಿದ್ದರು. ಹಾಗಾಗಿ ಕುತೂಹಲವೂ ಹೆಚ್ಚೇ ಇತ್ತು. ಆದರೆ, ಅವರ ಸರಳ ವ್ಯಕ್ತಿತ್ವ, ಅಂತರ ಕಾಯ್ದುಕೊಳ್ಳದೆ ವಿದ್ಯಾರ್ಥಿಗಳೊಂದಿಗೆ ಬೆರೆಯುವ ಅವರು ನಮಗೆ ಅಚ್ಚರಿ ಮೂಡಿಸಿದ್ದರು. ಮೇಲಿನಿಂದ ಸರಳವಾಗಿ ಕಂಡರೂ ಒಳಗಿನ ಅವರ ಗಟ್ಟಿತನ ಮತ್ತು ಕಾವು ನಿಜವಾಗಿಯೂ ಏನು ಎಂಬುದು ಪೂರ್ಣವಾಗಿ ತಿಳಿಯಬೇಕಿದ್ದರೆ ಬೊಗಸೆ ತುಂಬಾ ಕನಸನ್ನು ನಮ್ಮ ಬೊಗಸೆಯಲ್ಲಿ ಹಿಡಿದು ಓದಿಯೇ ತಿಳಿದುಕೊಳ್ಳಬೇಕು. ಬಡತನದಲ್ಲೇ ಹುಟ್ಟಿ ಬೆಳೆದರೂ, ಕಡುಕಷ್ಟದಿಂದಾಗಿ ಹೊಟ್ಟೆಗೆ ಸಾಕಷ್ಟು ಆಹಾರವಿಲ್ಲದಿದ್ದರೂ, ಉಡಲು-ತೊಡಲು ಸರಿಯಾದ ಬಟ್ಟೆ ಇಲ್ಲದಿದ್ದರೂ, ಇದಕ್ಕೂ ಪ್ರತಿಭೆಗೂ, ಯಶಸ್ಸಿಗೂ ತಾಳಮೇಳವಿಲ್ಲ ಎಂಬುದನ್ನು ಬುದುಕಿ ತೋರಿದವರು. ಅವರ ಬಾಲ್ಯದ ಜೀವನವನ್ನು ಓದುತ್ತಿದ್ದಾಗ ಕೆಲವೆಡೆ ಗಂಟಲುಬ್ಬಿ ಬಂದಿತ್ತು. ಅರಸಿನಮಕ್ಕಿ ಶಾಲೆಯಲ್ಲಿ ಏಳನೇ ಕ್ಲಾಸು ಕಲಿಯುತ್ತಿದ್ದಾಗ ರಾತ್ರಿಯ ಸ್ಪೆಷಲ್ ಕ್ಲಾಸಿಗಾಗಿ ಅಲ್ಲೇ ಉಳಿಯುವ ಸಂದರ್ಭದಲ್ಲಿ, ಮಾವ ತಂದು ಕೊಡುತ್ತಿದ್ದ ಬುತ್ತಿಯನ್ನು ಸಮ ಪಾಲುಮಾಡಿ ಮೂರು ಹೊತ್ತಿಗೆ ಭರಿಸಿಕೊಳ್ಳಬೇಕಿತ್ತು ಎಂದು ದಾಖಲಿಸುತ್ತಾ ಹೋಗುತ್ತಾರೆ ಇಂಥ ಘಟನೆಗಳು ಬೇಕಾದಷ್ಟಿವೆ. ಕಷ್ಟಾತಿಕಷ್ಟದಿಂದಾಗಿ ಇನ್ನೇನು ಶಾಲೆ ಕಲಿಕೆ ಕೊನೆಗೊಂಡಿತು, ಕೃಷಿ ಕಾರ್ಮಿಕನಾಗಿಯೋ ಇಲ್ಲ ಟೈಲರ್ ಆಗಿಯೋ ಮುಂದುವರಿಯುವುದೇ ಮುಂದಿನ ದಾರಿ ಎಂದಾಗ, ಮತ್ತೆಲ್ಲೋ ಇನ್ನಾವುದೋ ಎಳೆಸಿಕ್ಕಿ ವಿದ್ಯೆ ಮುಂದುವರಿದಿದೆ. ಒಂದು ಹಂತದಲ್ಲಿ ಹತ್ತನೇ ಕ್ಲಾಸು ಬಳಿಕ ಕಲಿಕೆ ನಿಂತೇ ಹೋಗಿ ಅಳಿಕೆಯಲ್ಲಿ ವಲಲನಾಗಿ ಮತ್ತೆ ಬ್ರೇಕ್ ತಗೊಂಡು ಮುಂದೆ ಸಾಗಿದ್ದು ಎಲ್ಲವೂ ಅನೂಹ್ಯ . ಅರಸಿನಮಕ್ಕಿ ಶಾಲೆಯ ಹೆಡ್ಮಾಸ್ಟ್ರು “ಇವನು ಮುಂದೊಂದು ದಿನ ಒಂದೋ ಒಳ್ಳೆಯ ಯಕ್ಷಗಾನ ಕಲಾವಿದನಾಗುತ್ತಾನೆ ಇಲ್ಲವೇ ಸಾಹಿತಿಯಾಗುತ್ತಾನೆ” ಅಂದಿದ್ದರಂತೆ. ಅವರಂದಂತೆ, ಒಬ್ಬ ಆದರ್ಶನೀಯ ಉಪನ್ಯಾಸಕ ಹಾಗೂ ಸಾಹಿತಿ, ಕಲಾವಿದ ಎಲ್ಲವೂ ಆಗಿದ್ದಾರೆ. ಅಂತೆಯೇ, ಹಾಸನ ಕಾಲೇಜಿನಲ್ಲಿ ಒಂದು ವರ್ಷ ಉಪನ್ಯಾಸಕರಾಗಿದ್ದು, ಬೀಳ್ಕೊಳ್ಳುವ ವೇಳೆ ಅವರ ವಿದ್ಯಾರ್ಥಿನಿ ನಿಶಾ ಎಂಬವರು, “ನೀವು ಎಲ್ಲಿ ಹೋದ್ರು ಸಕ್ಸಸ್ ಆಗ್ತೀರಿ. ನಿಮ್ಮಲ್ಲಿ ಪೊಟೆನ್ಷಿಯಲ್ ಇದೆ” ಅಂದಿದ್ದರಂತೆ. ಇದನ್ನು ಅವರ ಹೆಜ್ಜೆ ಗುರುತು ಮೂಡಿದಲ್ಲೆಲ್ಲ ಕಾಣಬಹುದು. ತರಗತಿಯಲ್ಲಿ ಅರ್ಥಶಾಸ್ತ್ರ ಹೇಳಲು ಹೊರಟರೆ ವಿದ್ಯಾರ್ಥಿಗಳನ್ನು ಸೆಳೆದು ಪಾಠಕೇಳಿಸುವ ಪರಿ ಆಕರ್ಷಣೀಯ. “ರೇಷ್ಮೆ ಹುಳು ಹಿಪ್ಪುನೇರಳೆ ಎಲೆಯನ್ನು ತಿಂದಂತೆ”. ಗ್ಯಾಪೇ ಇಲ್ಲದಂತೆ ನಿರರ್ಗಳವಾಗಿ ಪಠಿಸುತ್ತಿದ್ದರೆ, ಬೋರೇ ಆಗದಂತೆ ವಿದ್ಯಾರ್ಥಿಗಳು ಮಂತ್ರ ಮುಗ್ದರಾಗಿ ಕೇಳುತ್ತಿದ್ದರು. ಹಳ್ಳಿಗಾಡಿನ ಕನ್ನಡಶಾಲೆಗಳಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಇಂಗ್ಳೀಷು ಬರುವುದಿಲ್ಲ ಎಂಬ ಅರಿಮೆಯನ್ನು ಹೋಗಲಾಡಿಸಲು ಅವರು ಕನ್ನಡದಲ್ಲಿ ಬರೆದ ಅರ್ಥಶಾಸ್ತ್ರ ಪುಸ್ತಕಗಳು ನೆರವಾಗಿವೆ. ಕನ್ನಡದಲ್ಲಿ ಅರ್ಥಶಾಸ್ತ್ರ ಪುಸ್ತಕಗಳನ್ನು ಬರೆದು ವಿದ್ಯಾರ್ಥಿಗಳಿಗೆ ಕನ್ನಡದಲ್ಲೇ ಬರೆಯಲು ಪ್ರೇರೇಪಿಸಿದ್ದಾರೆ ಕೂಡ. ಒಬ್ಬ ಅಪ್ರತಿಮ ಸಂಘಟಕ. ಇದು ಅವರ ಬಾಲ್ಯದಿಂದಲೇ ಕಂಡು ಬರುತ್ತಿದೆ. ಪ್ರೈಮರಿ ಶಾಲಾ ದಿನಗಳಲ್ಲಿ ಲಾಗ ಹಾಕಿ ಬೊಬ್ಬೆ ಹೊಡೆಯುವಾಗ, ಹೋದಲ್ಲೆಲ್ಲ ಸಮವಯಸ್ಕರನ್ನು ಕೂಡಿಸಿ ಭಜನೆ ಮಾಡುವಾಗ, ಉಜಿರೆಯ ಸಿದ್ಧವನದಲ್ಲಿ ತರಲೆಗಳನ್ನು ಮಾಡಿದಾಗ, ಸುಳ್ಯದಲ್ಲಿ ಸ್ವಂತಿಕಾ ಪ್ರಕಾಶನ, ಅಭಿನಯ ಸುಳ್ಯ, ತೆಂಕುತಿಟ್ಟು ವೇದಿಕೆಗಳಲ್ಲಿ ತೊಡಗಿಕೊಂಡಾಗ, ವಿದ್ಯಾರ್ಥಿಗಳನ್ನು ಕಟ್ಟಿಕೊಂಡು ಚಾರಣ, ಜಲಪಾತ, ಸೈಕಲ್ ಜಾಥ ಎಂದು ತಿರುಗಾಡಿದಾಗ, ರೋಟರಿ ಅಧ್ಯಕ್ಷರಾಗಿ ಹತ್ತು ಹಲವುಕಾರ್ಯಕ್ರಮಗಳನ್ನು ನಡೆಸಿದಾಗ… ಅಲ್ಲಲ್ಲಿ ಅವರ ನಾಯಕತ್ವದ ಗುಣ ಅನಾವರಣ ಆಗುತ್ತಲೇ ಹೋಗುತ್ತದೆ. ಅವರು ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷರಾಗಿದ್ದಾಗ ದೊಡ್ಡೇರಿಗೆ ಸಂಪರ್ಕ ಸಾಧಿಸಲು ಪಯಸ್ವಿನಿ ನದಿಗೆ ತೂಗು ಸೇತುವೆ ನಿರ್ಮಿಸಲು ಪಟ್ಟ ಬವಣೆಯನ್ನು ವಿವರಿಸಿದ್ದಾರೆ. ನದಿಗೆ ಮಾತ್ರವಲ್ಲ, ಅಂತೆಯೇ ಹಲವು ಹೃದಯಗಳಿಗೂ ಸೇತುವೆ ನಿರ್ಮಿಸಿದ ಉದಾಹರಣೆ ಇದೆ ಈ ಪುಸ್ತಕದಲ್ಲಿ. ಅವರ ಯೂರೋಪ್, ಥಾಯ್ಲೆಂಡ್ ಪ್ರವಾಸವನ್ನು ಕಣ್ಣಿಗೆ ಕಟ್ಟಿದಂತೆ ಛಾಪಿಸಿದ್ದಾರೆ. ವಿದೇಶಿ ಪ್ರವಾಸದುದ್ದಕ್ಕೂ ನಡೆದ ಘಟನೆಗಳು, ದೇಶದೇಶಗಳ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮಗಳು ಮಾಹಿಯುಕ್ತ ಅಧ್ಯಾಯಗಳಾಗಿವೆ. ದೇವರು ಧರ್ಮದ ಬಗ್ಗೆ ಅಭಿಪ್ರಾಯಿಸುತ್ತಾ ಸ್ವಾತಂತ್ರ್ಯ ಎಂಬುದು ದೇವರಿಗಿಂತ ದೊಡ್ಡ ಮೌಲ್ಯ ಅಂದಿದ್ದಾರೆ. ಬದುಕಿನುದ್ದಕ್ಕೂ ವೈಚಾರಿಕತೆಯನ್ನು ಪ್ರತಿಪಾದಿಸುತ್ತಾ, ಸಂಘರ್ಷವನ್ನು ಎದುರಿಸುತ್ತಾ ಸ್ವಾಂತ್ರ್ಯವನ್ನು ಸವಿಯುತ್ತಾ ಮುಂದೆ ಸಾಗಿದ್ದಾರೆ.ಅನೇಕ ವಿವಾದಗಳೂ (ವಿವಾಹವೂ ಸೇರಿದಂತೆ) ಅವರನ್ನು ಸುತ್ತಿಕೊಂಡಿದೆ. ಅವುಗಳೆಲ್ಲವನ್ನೂ ಎದುರಿಸುತ್ತಾ ನಿಭಾಯಿಸುತ್ತಾ ಸಾಗಿದ್ದಾಗಿ ಬರೆದು ಕೊಂಡಿದ್ದಾರೆ. ಪ್ರೀತಿ ಪ್ರೇಮ, ನೋವು, ತಲ್ಲಣ, ತಳಮಳ, ವಿವಾದ, ವಿಷಾದ ಎಲ್ಲವೂ ಇರುವ ಈ ಪುಸ್ತಕ ಒಂದು ಸಿಹಿ, ಕಹಿ, ಉಪ್ಪು, ಹುಳಿ, ಕಾರ, ಒಗರು ಮಿಶ್ರಿತ ರಸಪಾಕದಂತಿದೆ. ಮೂಲತ ಉಪನ್ಯಾಸಕರಾದರೂ, ಯಕ್ಷಗಾನ ಕಲಾವಿದ, ನಟ, ಸಾಹಿತಿ, ಭಾಷಣಕಾರ ಹೀಗೆ ಹಲವು ರಂಗಗಳ ಪ್ರತಿಭಾಸಂಪನ್ನ ವ್ಯಕ್ತಿತ್ವ. ಅರ್ಥಶಾಸ್ತ್ರ ಮಾತ್ರವಲ್ಲ, ಯಕ್ಷಗಾನದಲ್ಲಿನ ಅರ್ಥಗಾರಿಕೆಯೂ ಅಷ್ಟೇ ಪ್ರಖರವಾದುದು. ಅರ್ಥಶಾಸ್ತ್ರದಲ್ಲಿ 180ಕ್ಕಿಂತಲೂ ಹೆಚ್ಚು ಅರ್ಥಶಾಸ್ತ್ರದ ಕೃತಿಗಳು ಮತ್ತು ಇತರ ಸಾಹಿತ್ಯ ಕೃತಿಗಳು ಹೀಗೇ ಸುಮಾರು 250 ಪುಸ್ತಕಗಳನ್ನು ಪ್ರಕಟಿಸಿದ ಕೀರ್ತಿ ಇವರಿಗಿದೆ. ತಮಗೆ ಎದುರಾದ ಸಂಕಷ್ಟ, ತೊಂದರೆ ತಾಪತ್ರಯ, ಕಷ್ಟ ಕೋಟಲೆಗಳನ್ನೆಲ್ಲಾ ಮೆಟ್ಟಿಲಾಗಿಸಿಕೊಂಡು ಬದುಕಿನ ಏಣಿಯಲ್ಲಿ ಇವರು ಏರುತ್ತಾ ಹೋಗಿರುವುದು ಒಂದು ರೋಚಕ ಕಥನ. ಸದಾಕ್ರಿಯಾಶೀಲರು. ಅಪಘಾತವಾಗಿ ಆಸ್ಪತ್ರೆ ವಾಸಿಯಾಗಿದ್ದಾಗಲೂ ಸುಮ್ಮನಿರದೆ ಪುಸ್ತಕ ಬರೆದು ಅಲ್ಲಿಯೇ ಬಿಡುಗಡೆಗೊಳಿಸಿ ಹುಬ್ಬೇರುವಂತೆ ಮಾಡಿದವರು. ಯಾವುದೇ ಸಂಘರ್ಷವಿರಲಿ, ಎಂಥಾ ಕಷ್ಟದ, ಸಂದಿಗ್ಧದ ಪರಿಸ್ಥಿತಿಗಳಿದ್ದರೂ ಛಲ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಅಡೆತಡೆಯನ್ನು ಮುರಿದು ಮುಂದೆ ಸಾಗಬಹುದು ಎಂಬುದನ್ನು ಈ ಪುಸ್ತಕ ನಿರೂಪಿಸುತ್ತದೆ. ಪುಸ್ತಕ ಓದಿ ಮುಗಿಸಿದಾಗ ಒಂದು ಲವಲವಿಕೆಯ ಅನುಭೂತಿ ನಮ್ಮದಾಗುತ್ತದೆ. ತಮ್ಮ ಏಳಿಗೆಗೆ ಕಾರಣರಾದವರನ್ನೆಲ್ಲ ಸ್ಮರಿಸುತ್ತಾರೆ. ಇವರ ಅಗಾಧವಾದ ಜ್ಞಾಪಕ ಶಕ್ತಿ ಅಚ್ಚರಿ ಹುಟ್ಟಿಸುತ್ತದೆ. ತೀರಾ ಪ್ರೈಮರಿ ಶಾಲೆಯಲ್ಲಿ ಕಲಿಯುತ್ತಿರುವಾಗ ಇದ್ದ ಸಹಪಾಠಿಗಳ ಹೆಸರೂ ಅವರ ಮಸ್ತಕದಲ್ಲಿದೆ. ಬಾಲ್ಯದಲ್ಲಿ ತಮ್ಮ ಭಾವತೀವ್ರತೆಗೆ ಸಹಭಾಗಿಯಾಗಿರುತ್ತಿದ್ದ ಕುಂಡಪ್ಪ ಎತ್ತಿನಿಂದ ಹಿಡಿದು ಅವರ ವಿದ್ಯಾರ್ಥಿಗಳ ತನಕ ಜೀವನದಲ್ಲಿ ಬಂದುಹೋದ ಎಲ್ಲರನ್ನು ಪ್ರಸ್ತಾಪಿಸಿ ಸ್ಮರಿಸಿಕೊಂಡಿದ್ದಾರೆ. ಕೊನೆಯಲ್ಲಿ ಒಂಚೂರು ತಮಾಷೆಯನ್ನು ಮಿಕ್ಸ್ ಮಾಡಿ ಲಘುದಾಟಿಯಿಂದ ಹೇಳುವುದಾದರೇ, ಪುಸ್ತಕವನ್ನು ಓದುತ್ತಾ ಓದುತ್ತಾ ಹೋದಂತೆ ನನಗೂ ಅವರಿಗೂ ತಂಬಾ ಸಾಮ್ಯತೆ ಮತ್ತು ಅಷ್ಟೇ ವ್ಯತ್ಯಾಸಗಳಿವೆ ಎಂದು ತಿಳಿಯಿತು. ಅವರು ಬಾಲ್ಯದಲ್ಲಿ ನನ್ನಂತೆ ಬಡವರಾಗಿದ್ದರು ಮತ್ತು ಪೆದ್ದರೂ ಆಗಿದ್ದರೂ. ಆದರೆ ನಾನು ನನ್ನ ಪೆದ್ದುತನವನ್ನು ಇನ್ನೂ ಜತನದಿಂದ ಕಾಯ್ದುಕೊಂಡಿದ್ದರೆ, ಅವರು ಇದಕ್ಕೆ ವ್ಯತಿರಿಕ್ತವಾಗಿ ಬುದ್ಧಿವಂತರಾಗಿ ಮಿಂಚು ಹರಿಸಿದ್ದಾರೆ. ಪುಸ್ತಕದುದ್ದಕ್ಕೂ, ಗಂಭೀರತೆಯೊಂದಿಗೆ, ಭಾವುಕತೆ, ತುಂಟತನ, ಪೋಲಿತನ, ಖಾಲಿತನ ಎಲ್ಲವೂ ಇದೆ. ಸರಳ ಭಾಷೆ, ಸುಲಲಿತ ನಿರೂಪಣೆಯೊಂದಿಗೆ ಓದಿಸಿಕೊಂಡು ಹೋಗುವ 29 ಅಧ್ಯಾಯಗಳನ್ನು ಹೊತ್ತ ಈ ಬೃಹತ್ ಸಂಚಿಕೆಯ ಅನುಬಂಧದಲ್ಲಿ ‘ಗುರುವುನು ಮಿಂಚಿನ ಶಿಷ್ಯುಡು’ ಎಂಬ ಅಧ್ಯಾಯವಿದೆ. ಅಲ್ಲಿ 71 ವಿದ್ಯಾರ್ಥಿಗಳ ಪ್ರಸ್ತಾಪ-ಪರಿಚಯವಿದೆ. ಇದನ್ನು ಓದಿದಾಗ ಇಲ್ಲಿ ನಾನೂ ಇರಬೇಕಿತ್ತು ಅಂತ ಅನ್ನಿಸಿದ್ದು ಸುಳ್ಳಲ್ಲ. ಅಲ್ಲಿ ಸೇರುವಂತ ಸಾಧನೆ ನನ್ನದೇನಿಲ್ಲ ಅನ್ನುವುದೂ ಅಷ್ಟೇ ಸತ್ಯ. ಆದರೂ, “ಈ ಅಧ್ಯಾಯದಲ್ಲಿ ಯಾರದಾದರೂ ನೆನಪು ಬಿಟ್ಟು ಹೋಗಿದ್ದರೆ ಅದಕ್ಕೆ ನನ್ನ ಮರೆಗುಳಿತನ ಕಾರಣ” ಎಂದಿದ್ದಾರೆ. ಅವರ ಮರೆಗುಳಿತಕ್ಕೆ ಒಂದಿಷ್ಟು ಬೆಂಕಿಹಾಕ ಅಂತ ಮನದಲ್ಲೇ ಗುರುವಿಗೇ ತಿರುಮಂತ್ರ ಹಾಕಿ ನಕ್ಕು ಸುಮ್ಮನಾದೆ (ಅವರ ವಿದ್ಯಾರ್ಥಿನಿಯಾಗಿದ್ದ ಕಾಲದ ಅಂದಿನ ಅದೇ ಸಲಿಗೆಯಲ್ಲಿ)! ********************************************* ಚಂದ್ರಾವತಿ ಬಡ್ಡಡ್ಕ

ಬೊಗಸೆ ತುಂಬಾ ಕನಸು Read Post »

ಕಾವ್ಯಯಾನ

ನಂಬಿಕೆ

ಕವಿತೆ ನಂಬಿಕೆ ರೇಷ್ಮಾ ಕಂದಕೂರು ಮನುಜತೆಯ ಸಾಕಾರ ರೂಪಅರಿವಿನ ಮಹಾಪೂರಅವಿನಾಭಾವದ ಸರದಿ ಶುದ್ಧ ಮನದ ರಿಂಗಣಅಭಿಮಾನದ ಗೂಡುಒಲುಮೆಯ ಹರಕೆ ಕಾರುಣ್ಯದ ಬದುಕುಸತ್ವರಜದ ತೇಜಸ್ಸುಪರಿಪೂರ್ಣ ಬಂಧುತ್ವ ವಿಶ್ವಾಸದ ಹೊನಲುಆಸರೆಯ ತೋರಣನೆರಳು ಬೆಳಕಿಗೆ ಸಮಸ್ಥಿತಿ ***************************

ನಂಬಿಕೆ Read Post »

ಇತರೆ, ಗಾಂಧಿ ವಿಶೇಷ

ಉತ್ತರ ಕನ್ನಡ ಜಿಲ್ಲೆ ದಾರಿಯಲ್ಲಿ ಗಾಂಧಿ ಬಂದು ಹೋಗಿದ್ದರು….

ಗಾಂಧಿ ವಿಶೇಷ  ಉತ್ತರ ಕನ್ನಡ ಜಿಲ್ಲೆ ದಾರಿಯಲ್ಲಿ  ಗಾಂಧಿ  ಬಂದು ಹೋಗಿದ್ದರು…. ಗಾಂಧಿಜೀ ಉತ್ತರ ಕನ್ನಡ ಜಿಲ್ಲೆಯ ಪ್ರವಾದ ನನಗೆ  ಮುಖ್ಯವಾಗುವುದು ಮೂರು ಕಾರಣಗಳಿಗೆ. ಒಂದನೇ ಕಾರಣ ಗಾಂಧಿಜೀ ಅಸ್ಪೃಶ್ಯತೆಯನ್ನು ಜನರ ಮನದಿಂದ ಕಿತ್ತೊಗೆಯಲು ಪ್ರಾಮಾಣಿಕ ಪ್ರಯತ್ನ ಮಾಡಿದರು. ಎರಡನೇ ಕಾರಣ ದೇವಸ್ಥಾನದಲ್ಲಿನ ಪ್ರಾಣಿ ಬಲಿ ನಿಲ್ಲಿಸಲು ಯತ್ನಿಸಿದರು ಹಾಗೂ ಇದರಲ್ಲಿ ಯಶಸ್ವಿಯಾದರು. ಮೂರನೇ ಕಾರಣ  ಬಾಲವಿಧವೆಯರ ಕೇಶ ಮುಂಡನೆಯಂಥ ಸಂಪ್ರದಾಯವನ್ನು ನಿಲ್ಲಿಸಿದರು. ವಿಶೇಷವೆಂದರೆ ಈ ಮೂರು ಘಟನೆಗಳು ನಡೆದದ್ದು ೧೯೩೪ ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸದಲ್ಲಿದ್ದಾಗ ಎಂಬುದು ಗಮನಾರ್ಹ.   ಇದಕ್ಕೆ ಭಾರತದಲ್ಲಿ ಆಗ ಪ್ರಕಟವಾಗುತ್ತಿದ್ದ ದಿನ ಪತ್ರಿಕೆ ವರದಿಗಳೇ ಸಾಕ್ಷಿ. ಅಲ್ಲದೇ  ಗಾಂಧಿಜೀಯೇ ಹೊರ ತರುತ್ತಿದ್ದ ಪತ್ರಿಕೆಯಲ್ಲಿ ಈ ಸಂಗತಿಗಳು ದಾಖಲಾಗಿವೆ.  ಮುಂಬೈ ಪ್ರಾವಿಜೆನ್ಸಿಯಲ್ಲಿದ್ದ ಅಂದಿನ ಕೆನರಾ ಜಿಲ್ಲೆ, ಇಂದಿನ ಕಾರವಾರ ಜಿಲ್ಲೆಯನ್ನು ಸುಬ್ರಾಯ್  ರಾಮಚಂದ್ರ ಹಳದೀಪುರ  ಪ್ರಜಾಪ್ರತಿನಿಧಿಯಾಗಿ ಪ್ರತಿನಿಧಿಸುತ್ತಿದ್ದರು. ಅಲ್ಲದೇ ಗಾಂಧಿಜೀಯನ್ನು ಮುಂಬಯಿನಲ್ಲಿ ಭೇಟಿಯಾಗಿ ಕಾರವಾರಕ್ಕೆ ಬರುವಂತೆ ಆಹ್ವಾನಿಸಿದ್ದರು. ೧೯೩೪ರಲ್ಲಿ ಅಸ್ಪೃಶ್ಯತೆಯ ವಿರುದ್ಧ ಜಾಗೃತಿಗಾಗಿ ಗಾಂಧಿಜೀ ಭಾರತ ಪ್ರವಾಸ ಕೈಗೊಂಡಿದ್ದರು. ೨೩ ಫೆಬ್ರುವರಿ ೧೯೩೪ರಲ್ಲಿ ಮಂಗಳೂರು ಪ್ರವಾಸ ಮುಗಿಸಿ, ಫೆ.೨೮ ರಂದು ಕುಮಟಾ ತಲುಪಿದ ಗಾಂಧಿಜೀ, ಕುಮಟಾ ಹಾಗೂ  ಅಂಕೋಲಾದಲ್ಲಿ ಅಸ್ಪೃಶ್ಯತೆಯ ಅನಿಷ್ಠದ ವಿರುದ್ಧ ಮಾತನಾಡಿದ್ದರು.  ಗಾಂಧೀಜಿ ಸಂಜೆ ಕಾರವಾರಕ್ಕೆ ಬಂದರು. ಅವರನ್ನು ಸುಬ್ಬರಾವ್ ಆರ್. ಹಳದೀಪುರ ಸ್ವಾಗತಿಸಿದರು. ಕಾರವಾರ ನಗರಸಭೆಯಿಂದ ಆಗ ಗಾಂಧಿಜೀಯನ್ನು  ಸನ್ಮಾನಿಸಲಾಗಿತ್ತು.  ಗಾಂಧಿಜೀಗೆ ನೀಡಿದ ಸ್ಮರಣಿಕೆಯನ್ನು ಗಾಂಧೀ ಸಾರ್ವಜನಿಕ ಸಭೆಯಲ್ಲಿ ಹರಾಜು ಮಾಡಿದರು. ಅದನ್ನು ಶಾಸಕ ಸುಬ್ಬರಾಯ ಹಳದೀಪುರ ಅವರು ಹರಾಜಿನಲ್ಲಿ ಪಡೆದು ಸಾವಿರ ರೂ. ಮೊತ್ತವನ್ನು ನೀಡಿದರು. ಆ ಹಣವನ್ನು  ಅಸ್ಪೃಶ್ಯತಾ ನಿವಾರಣ ಕಾರ್ಯಕ್ರಮಕ್ಕೆ ಬಳಸುವುದಾಗಿ ಗಾಂಧೀಜಿ ಹೇಳಿದರು. ಇಲ್ಲಿ ಪ್ರಮುಖವಾದುದು  ಅಸ್ಪೃಶ್ಯತೆ ವಿರುದ್ಧ ಜನ ಜಾಗೃತಿಗಾಗಿ ದೇಶದ ಹಲವು ರಾಜ್ಯ ಸುತ್ತಿದ ಗಾಂಧೀಜಿ ಅಸ್ಪೃಶ್ಯತಾ ನಿವಾರಣಾ  ನಿಧಿ ಸಂಗ್ರಹದ ಮೂಲಕ ದೇಶದ ಜನತೆಯಲ್ಲಿ ಮನುಷ್ಯ ಸಣ್ಣತನಗಳನ್ನು ಬಿಡಿಸಲು ಯತ್ನಿಸಿದರು. ಆಸ್ಪೃಶ್ಯತೆ ನಮಗೆ ಲಜ್ಜಾಸ್ಪದವಾದುದು. ಅದನ್ನು  ನಾವು ತೊಲಗಿಸಬೇಕು ಎಂದಿದ್ದರು. ಕಾರವಾರದ ಸಭಾ ಕಾರ್ಯಕ್ರಮದಲ್ಲಿ  ಜನತೆಯನ್ನು ಉದ್ದೇಶಿಸಿ ಮಾತನಾಡಿದ  ಗಾಂಧೀಜಿ ಕರ್ನಾಟಕದ ಜನತೆ ಅಸ್ಪೃಶ್ಯತೆಯನ್ನು ಕಿತ್ತೊಗೆಯುವತ್ತ ಸಜ್ಜಾಗಿರುವುದನ್ನು ನಾನು ಕಾಣುವಂತಾದುದಕ್ಕಾಗಿ, ನನಗೆ ಬಹಳ ಸಂತೋಷವಾಗಿದೆ. ಅಸ್ಪೃಶ್ಯತೆ ನಿವಾರಣೆಗೆ ಅನುಕೂಲವಾಗಿ ಜನರಲ್ಲಿ ಪರಿವರ್ತನೆ  ದಿನಾಲು ಬೆಳೆಯುತ್ತಿರುವ ಸಂತೋಷ. ಈ  ಭಾವನೆಯನ್ನು ಕ್ರಿಯೆಯ ರೂಪದಲ್ಲಿ ಮಾರ್ಪಡಿಸಿಕೊಳ್ಳುವ ಸತ್ಯನಿಷ್ಠ ಮತ್ತು ಉತ್ಸಾಹ ಶಾಲಿ ಕಾರ್ಯಕರ್ತರನ್ನು ಅಭಿನಂದಿಸುವೆ.  ಅಸ್ಪೃಶ್ಯರ ಬಗ್ಗೆ ಎಲ್ಲೆಲ್ಲೂ ಸಹಾನುಭೂತಿ ಇದೆ. ಸರಿಯಾದ ವಾತಾವರಣ ಇದೆ. ಆದರೆ ಆ ನಂಬಿಕೆಯನ್ನು ಸಾರ್ಥಕಗೊಳಿಸುವ ಜ್ಞಾನಬೇಕು. “ ಎಲ್ಲಿ ಶ್ರದ್ಧೆ ಮಾಯಾವಾಗುತ್ತದೆಯೋ, ಅಲ್ಲಿ  ಆರಂಭಶೂರರಾಗಿ ಉಳಿಯುತ್ತೇವೆ” ಎಂದರು. ಹಿಂದೂಗಳು ನಾವು ಅಸ್ಪೃಶ್ಯರನ್ನು ಕೀಳಾಗಿ ಕಾಣುತ್ತೇವೆ. ಅವರನ್ನು ಮುಟ್ಟಿದರೆ ಪಾಪ ಎಂದು ತಿಳಿದಿದ್ದೇವೆ. ಇದು ದೇವರೆದುರು ಮಾಡಿದ ಮಹಾಪಾಪ. ಭಗವಂತ ಮಾನವಕುಲದ ಒಂದು ಭಾಗವನ್ನು ಅಸ್ಪೃಶ್ಯ ಎಂದು ಬೇರೆ ಮಾಡಿದ ಎಂಬ ಮಾತು ದೈವದ್ರೋಹ. ಹಿಂದೂಗಳಿಗೆ ನಾನು ಎಚ್ಚರಿಕೆ ಕೊಡಬಯಸುತ್ತೇನೆ. ಅಸ್ಪೃಶ್ಯತಾ ನಿವಾರಣೆ ಒಂದು ಪ್ರಾಯಶ್ಚಿತ್ತ. ಸವರ್ಣ ಹಿಂದೂಗಳು ತಮಗೂ ಹಿಂದೂಧರ್ಮಕ್ಕೂ ಪ್ರಾಯಶ್ಚಿತ್ತ ಮೂಲಕ ಋಣಮುಕ್ತರಾಗಬೇಕು. `ಹೊಲಸು’ ರಾಷ್ಟ್ರಗಳಿಗೆ ಹೇಗೋ,  ಧರ್ಮಗಳಿಗೂ ಹಾಗೆಯೇ. ದೇವರ ಅನುಗ್ರಹ, ದೇವರ ಸಾಕ್ಷಾತ್ಕಾರವು ಯಾವ ಜಾತಿಗೂ ಯಾವ ರಾಷ್ಟçಕ್ಕೂ ಗುತ್ತಿಗೆಯಲ್ಲ. ಯಾವ ರಾಷ್ಟ,ಯಾವ ಮತ, ಅನ್ಯಾಯಕ್ಕೆ, ಅಸತ್ಯಕ್ಕೆ, ಹಿಂಸೆಗೆ ಮಡಿಲು ಕಟ್ಟುತ್ತದೆಯೋ ಅದು ಈ ಭೂಮಿಯಿಂದ ಮಾಯವಾಗುತ್ತದೆ. ಅಸ್ಪಶ್ಯತೆಯು ಹಿಂದೂ ಧರ್ಮಕ್ಕೆ ಒಂದು ಕಳಂಕ ಮತ್ತು ಮಾನವೀಯತೆಗೆ ಎಸಗಿದ ಅಪರಾಧ ಎಂದು ಗಾಂಧಿ ಸಮಾವೇಶದಲ್ಲಿ ನೆರೆದಿದ್ದ ಜನತೆಗೆ ವಿವರಿಸಿದರು. ೧೯೩೪ ಮಾರ್ಚ ೧ ರಂದು ಗಾಂಧಿ ಶಿರಸಿ ತಲುಪಿದರು.  ಗಾಂಧೀಜಿ ಶಿರಸಿಯಲ್ಲಿ ಅವರು ಮಾರಿಕಾಂಬಾ ದೇವಾಲಯಕ್ಕೆ ಭೇಟಿ ನೀಡಿದರು.   ಕುರಿ, ಕೋಣ, ಕೋಳಿಗಳನ್ನು ಬಲಿ ಕೊಡಬಾರದು ಎಂದು ಹೇಳಿದ್ದರು. ಆಗ ಶಾಸಕರೂ ಮತ್ತು ದೇವಾಲಯದ ಧರ್ಮದರ್ಶಿಗಳೂ ಆಗಿದ್ದ ಎಸ್.ಎಸ್.ಕೇಶವ್ವಾನ್ ಗಾಂಧೀಜಿ ಕರೆಯನ್ನು ಅನುಸರಿಸಿ, ಕೋಣ ಬಲಿ ನಿಲ್ಲಿಸಿದರು. ಅದು ಈಗಲೂ ಮುಂದುವರಿದಿದೆ. ೧೯೪೨ ಮಾರ್ಚ ೨೬  ಹರಿಜನ ಪತ್ರಿಕೆಯ ಸಂಚಿಕೆಯಲ್ಲಿ ಶಿರಸಿಯ ಮಾರಿಕಾಂಬ ಜಾತ್ರೆ ಕುರಿತಂತೆ ನೆನಪುಗಳನ್ನು ಗಾಂಧಿಜೀ ದಾಖಲಿಸಿದ್ದಾರೆ. ಶಿರಸಿ ಭೇಟಿಯ ನಂತರ  ಗಾಂಧಿಜೀ ಸಿದ್ದಾಪುರಕ್ಕೆ ತೆರಳಿದರು.  ಮಹಾದೇವಿ ತಾಯಿ ರಾಮಕೃಷ್ಣ ಹೆಗಡೆ ಅವರ ಅಕ್ಕ. ಸಿದ್ದಾಪುರದ ದೊಡ್ಮನೆ ಹೆಗಡೆ ಅವರ ಮಗಳು. ಮಹಾದೇವಿ ಅವರಿಗೆ ಬಾಲ್ಯವಿವಾಹವಾಗಿತ್ತು. ಅಪ್ರಾಪ್ತ ವಯಸ್ಸಿನಲ್ಲಿ ಆಕೆಯ ಗಂಡ ತೀರಿಹೋಗಿದ್ದರು. ಬ್ರಾಹ್ಮಣ ಸಂಪ್ರದಾಯದಂತೆ ಆಕೆಯ ತಲೆಯ ಕೇಶ ಮುಂಡನ ಮಾಡಿಸಲಾಗಿತ್ತು. ಇದನ್ನು ಸಿದ್ದಾಪುರಕ್ಕೆ ಗಾಂಧೀಜಿ ಬಂದಾಗ ಗಮನಿಸಿದರು. ಮಹಾದೇವಿ ಅವರ ತಂದೆಯ  ಜೊತೆ ಗಾಂಧೀಜಿ ಮಾತನಾಡಿದರು. ಕೇಶ ಮುಂಡನಕ್ಕೆ ವಿರೋಧ ವ್ಯಕ್ತಪಡಿಸಿದರು. ಇದು ಸಂಪ್ರದಾಯ ಎಂದು ಮಹಾದೇವಿ ತಂದೆ ಪ್ರತಿಕ್ರಿಯಿಸಿದಾಗ `ನಿಮ್ಮ ಮಗಳಿಂದಲೇ ಕೇಶ ಮುಂಡನಾ ಪದ್ಧತಿ ನಿಲ್ಲಲಿ.  ಹೊಸ ಪದ್ಧತಿ ಆರಂಭವಾಗಲಿ. ಏಕೆ ಆಗಬಾರದು? ಎಂದು ಗಾಂಧೀಜಿ ಮರು ಪ್ರಶ್ನಿಸಿದರು. `ವರ್ದಾ ಆಶ್ರಮಕ್ಕೆ ತೆರಳಲು ಆಕೆ ಇಚ್ಚೆಸುತ್ತಾಳೆ. ನಿಮ್ಮ ಅನುಮತಿ ಇದೆಯೇ’ ಎಂದು ಗಾಂಧೀಜಿ ಮತ್ತೆ ಪ್ರಶ್ನಿಸಿದರು. `ಅವಳು ಪ್ರಬುದ್ಧಳು. ಮನಸ್ಸಿಗೆ ಬಂದಲ್ಲಿ ಹೋಗಲು ಸ್ವತಂತ್ರಳು’ ಎಂದರು ದೊಡ್ಮನೆ ಹೆಗಡೆ. ಹೀಗೆ ಗಾಂಧಿಜೀ ಉತ್ತರ ಕನ್ನಡ ಪ್ರವಾಸ ಮೂರು ಮುಖ್ಯ ಸಂದೇಶಗಳನ್ನು ನೀಡಿತ್ತು. ಅವು ಈಗಲೂ ನಮಗೆ , ಸಮಾಜಕ್ಕೆ ದಾರಿ ದೀಪವಾಗಿವೆ ಎಂಬುದನ್ನು ಮರೆಯಲಾಗದು. ……….. ಮಹಾತ್ಮಾ ಗಾಂಧಿಜೀ ಅವರ ೧೫೧ ನೇ ಜನ್ಮದಿನ ವಾರ್ಷಾಚರಣೆಯ ಈ ಸಂದರ್ಭದಲ್ಲಿ ದೇಶ ಅವರನ್ನು ಈಗ ಸ್ಮರಿಸುತ್ತಿದೆ. ರಾಷ್ಟ್ರಪಿತನನ್ನು  ಪುನಃ ಪುನಃ ಸ್ಮರಿಸಿಕೊಳ್ಳುತ್ತಿದೆ. ಗ್ರಾಮೀಣ ಭಾರತದ ಪುನಶ್ಚೇತನಕ್ಕೆ ಗಾಂಧಿಜೀ ಕೆಲ ಸಿದ್ಧ ಸರಳ ಮಾದರಿಗಳನ್ನು ಬಿಟ್ಟುಹೋಗಿದ್ದರು. ಸರಳತೆ ಮತ್ತು ಕೃಷಿ ಆಧಾರಿತ ಬದುಕು ಗ್ರಾಮೀಣ ಭಾರತವನ್ನು ಪುನಃ ಕಟ್ಟಬಲ್ಲದು ಎಂಬುದು ಗಾಂಧಿಜೀ ಆಶಯವಾಗಿತ್ತು. ಗ್ರಾಮೀಣ ಗುಡಿಕೈಗಾರಿಕೆಗಳನ್ನು ಉಳಿಸಿಕೊಳ್ಳುವುದು, ಯಂತ್ರಗಳ ನೆರವಿನಿಂದ ಸಾಧ್ಯವಾದಷ್ಟು ದೂರ ಇರುವುದು ಗಾಂಧಿಜೀ ತಿಳಿ ಹೇಳಿದ ಸರಳ ಸಂಗತಿಗಳು. ಸತ್ಯ, ಅಹಿಂಸೆ, ಸಹನೆ ಮಾರ್ಗ ಗಾಂಧಿಜೀ ನಡೆ ನುಡಿಯಲ್ಲೇ ಇತ್ತು. ಅದಕ್ಕಾಗಿ ಗಾಂಧಿ ಹೇಳಿದ್ದು ನನ್ನ ಜೀವನವೇ ನನ್ನ ಸಂದೇಶ ಎಂದು. ತುಂಬಾ ಪ್ರಯೋಗಶೀಲರಾಗಿದ್ದ ಗಾಂಧಿಜೀ ಜೀವನದುದ್ದಕ್ಕೂ ಅಧಿಕಾರ ದಿಂದ ದೂರ ಉಳಿದರು. ಆದರೆ ಅಧಿಕಾರ ಕೇಂದ್ರವನ್ನು ನಿರ್ದೇಶಿಸಿದರು.ತ ಬ್ರಿಟಿಷರನ್ನು ಗಾಂಧಿ ಬದಲಿಸಿದರು, ಮನವೊಲಿಸಿದರು, ಅವರಿಂದ ಸ್ವಾತಂತ್ರ್ಯವನ್ನು ಪಡೆದರು ಎಂಬುದು ಸ್ಮರಣಿಯ. ..************************************ ನಾಗರಾಜ ಹರಪನಹಳ್ಳಿ.

ಉತ್ತರ ಕನ್ನಡ ಜಿಲ್ಲೆ ದಾರಿಯಲ್ಲಿ ಗಾಂಧಿ ಬಂದು ಹೋಗಿದ್ದರು…. Read Post »

ಕಾವ್ಯಯಾನ

ಅಸಹನೆ

ಕವಿತೆ ಅಸಹನೆ ಭಾಗ್ಯ ಸಿ. ಯಾರೊಂದಿಗೆ ಅಸಹನೆ ಏತಕ್ಕಾಗಿಬೂದಿ ಮುಚ್ಚಿದ ಕೆಡದಂತೆ ಕೋಪಸ್ಥಾನಪಲ್ಲಟವಾಗಿವೆ ಜಡ ವಸ್ತುಗಳುಮನಸ್ಸಿನ ತುಂಬೆಲ್ಲ ಅಶಾಂತತೆಯ ಛಾಯೆ ಸಾಗುತ್ತಿರುವ ದಾರಿ‌ ಮುಟ್ಟುವುದೆಲ್ಲಿಗೆಪರಿಶ್ರಮವಿಲ್ಲದೆ ಯಶಸ್ಸಿನ ಬಯಕೆ ಏಕೆ?ಅಂಧರೇನಲ್ಲ ಬಿದ್ದರು ಮೇಲೆಳಬಹುದುಸ್ವಚ್ಛಂದವಾಗಬೇಕು ಜಿಗುಟುತನ ತೊರೆದು ಬಿರುಗಾಳಿ ಯಿಂದ ಅಸ್ತವ್ಯಸ್ತ ಜೀವನವಿವೇಚನೆಯಿಲ್ಲದ ಹುಚ್ಚು ನಿರ್ಧಾರವೈರುಧ್ಯಗಳ ನಡುವೆ ಋಣಾತ್ಮಕತೆಜಂಟಿ ಹೋರಾಟ, ಹೊರನಡೆ ಶೀಘ್ರದಲಿ ತಲೆಹರಟೆ ಪ್ರಕ್ರಿಯೆಗಳ ತೊರೆದುಭ್ರಮಾ ಲೋಕ ಬಿಟ್ಟು ವಾಸ್ತವದೆಡೆಗೆನಡೆ ತನ್ನ ಉಳಿವಿನ ಬೆಳಕಿನೆಡೆಗೆಅಸಹನೆ ತೊರೆದು ಮಿನುಗುವ ನಕ್ಷತ್ರವಾಗಿ **********************************************

ಅಸಹನೆ Read Post »

ಪುಸ್ತಕ ಸಂಗಾತಿ

ಮಹಿಳೆ ಮತ್ತು ಭಾರತೀಯ ಕಾನೂನು ವ್ಯವಸ್ಥೆ – ಸಿ.ಎನ್. ರಾಮಚಂದ್ರನ್:

ಪುಸ್ತಕ ಪರಿಚಯ ಮಹಿಳೆ ಮತ್ತು ಭಾರತೀಯ ಕಾನೂನು ವ್ಯವಸ್ಥೆ ಮಹಿಳೆ ಮತ್ತು ಭಾರತೀಯ ಕಾನೂನು ವ್ಯವಸ್ಥೆ – ಸಿ.ಎನ್. ರಾಮಚಂದ್ರನ್: ಒಂದು ಅವಲೋಕನ (ಅಂಕಿತ ಪುಸ್ತಕ, ಬೆಂಗಳೂರು: ೨೦೨೦; ಪು.೧೬೦  ಬೆಲೆ: ರೂ.೧೫೦/-) ಭಾರತೀಯ ಕಾನೂನುಗಳ – ಅದರಲ್ಲೂ ವಿಶೇಷವಾಗಿ ‘ಭಾರತೀಯ ದಂಡ ಸಂಹಿತೆ’ – ಕುರಿತು ಮಾತನಾಡುವಾಗ “ಮಹಿಳೆ” ಎನ್ನುವುದನ್ನು ಒತ್ತಿ ಹೇಳಬೇಕಾಗಿ ಬಂದಿರುವುದು ನಿಜಕ್ಕೂ ದುರದೃಷ್ಟಕರವಾದರೂ ಅದೊಂದು ನಿಷ್ಠುರ ಸಾಮಾಜಿಕ ಸತ್ಯ ಎಂಬುದನ್ನು ಒಪ್ಪಿಕೊಳ್ಳಲೇ ಬೇಕು. ‘ಸರ್ವರ ಸಮಾನತೆ’ಯನ್ನು ನಮ್ಮ ಸಂವಿಧಾನ ಎತ್ತಿ ಹಿಡಿದಿದೆಯಾದರೂ ಅದೊಂದು ಅತೀ ಉದಾತ್ತ ಆಶಯವಾಗಿ ಮಾತ್ರ ಉಳಿದುಕೊಂಡಿದೆ; ವಾಸ್ತವದಲ್ಲಿ ಹಾಗಿಲ್ಲ ಎನ್ನುವುದಕ್ಕೆ ಯಾವ ದೊಡ್ಡ ಸಂಶೋಧನೆಯೂ ಬೇಕಾಗಿಲ್ಲ. ಪುರುಷ-ಪ್ರಧಾನ ಭಾರತೀಯ ಸಮಾಜದಲ್ಲಿ (ವಿಶ್ವದ ಎಲ್ಲೆಡೆಯೂ ಇದೊಂದು ಸಾಮಾಜಿಕ ಅಸಮತೋಲನದ ಅತ್ಯಂತ ಸಾಮಾನ್ಯ ಸಮಸ್ಯೆ – ತರ ತಮ ವ್ಯತ್ಯಾಸಗಳು ಇವೆ ಎನ್ನುವುದನ್ನು ಒಪ್ಪಿಕೊಂಡಾಗಲೂ!) ಮಹಿಳೆ ಲಿಂಗಾಧಾರಿತ ತಾರತಮ್ಯ ಹಾಗೂ ಅದರೊಂದಿಗೆ ಅನೂಚಾನವಾಗಿ ಬೆಸೆದುಕೊಂಡಿರುವ ಶೋಷಣೆಗೆ ತಲೆತಲಾಂತರಗಳಿಂದಲೂ  ಒಳಗಾಗುತ್ತಾಳೆ ಇದ್ದಾಳೆ. ಮಹಿಳೆಗೆ ನ್ಯಾಯ, ಸಾಮಾಜಿಕ ಭದ್ರತೆ ಹಾಗೂ ರಕ್ಷಣೆ   ಒದಗಿಸುವ ನಿಟ್ಟಿನಲ್ಲಿ ರಚಿಸಲ್ಪಟ್ಟ ಕಾನೂನುಗಳ ಮಾಹಿತಿ, ನಿರ್ವಚನ ಮತ್ತು ಅವುಗಳ ಮಿತಿಗಳನ್ನು ಈ ಪುಸ್ತಕ ಸಾಧಾರವಾಗಿ ಮಂಡಿಸುತ್ತದೆ. ಇಲ್ಲಿಯ ಭಾಷೆ ಕಾನೂನಿನ ಕ್ಲಿಷ್ಟತೆಯನ್ನು ನಿವಾರಿಸಿ ಅತ್ಯಂತ ಸರಳ ಹಾಗೂ ಸ್ಪಷ್ಟ ಮಾತುಗಳಲ್ಲಿ ವಿಷಯ ಮಂಡನೆ ಮಾಡುವುದರಿಂದ ಎಲ್ಲಾ ವರ್ಗದ ಓದುಗರಿಗೂ – ವಿಶೇಷತಃ ಸಾಮಾನ್ಯ ಮಹಿಳೆಯರಿಗೂ ಇದು “ನೀರಿಳಿಯದ ಗಂಟಲಲ್ಲಿ ಕಡುಬಂ ತುರುಕಿ”ದಂತಾಗದೆ ಇರುವುದು ಈ ಪುಸ್ತಕದ ಮೊದಲ ಹೆಗ್ಗಳಿಕೆ. ಈ ಪುಸ್ತಕದ ಅಧ್ಯಾಯಗಳ ಶೀರ್ಷಿಕೆಗಳೇ ಗಮನ ಸೆಳೆಯುವಂತಿವೆ: ಅಧ್ಯಾಯ ೧: ಮಹಿಳೆ ಮತ್ತು ವೈವಾಹಿಕ-ಕೌಟುಂಬಿಕ ವ್ಯವಸ್ಥೆ (ಪು.೧೮-೬೩) ಅಧ್ಯಾಯ ೨: ಮಹಿಳೆಯ ಮೇಲಾಗುವ ಲೈಂಗಿಕ ಅಪರಾಧಗಳು (ಪು.೬೪-೮೬) ಅಧ್ಯಾಯ ೩: ಮಹಿಳೆಯ ಘನತೆಗೆ ಕುಂದು ತರುವ ಅಪರಾಧಗಳು (ಪು.೮೭-೧೦೩) ಅಧ್ಯಾಯ ೪: ಮಹಿಳೆಯ ಹಕ್ಕುಗಳು (೧೦೪-೧೧೦) ಅಧ್ಯಾಯ ೫: ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಮಹಿಳೆಯರು (೧೧೧-೧೩೪) ಅಧ್ಯಾಯ ೬: ಉಪಸಂಹಾರವಿಲ್ಲದ ಕಥನ (ಪು.೧೩೫-೧೩೭)    ಸಿ.ಎನ್. ರಾಮಚಂದ್ರನ್ ಅವರು ಇಂಗ್ಲೀಷ್ ಪ್ರಾಧ್ಯಾಪಕರಾಗಿ, ತಮ್ಮ ವಿಸ್ತಾರವಾದ ಓದು, ಬರೆಹ, ಅಧ್ಯಯನಗಳಿಂದ   ಮಹತ್ವಪೂರ್ಣ ಒಳನೋಟಗಳನ್ನು ಕೊಡಬಲ್ಲ ಸಾಹಿತ್ಯ-ಸಂಸ್ಕೃತಿ ವಿಮರ್ಶಕರಾಗಿ, ಉತ್ತಮ ಲೇಖಕರಾಗಿ, ಅನುವಾದಕರಾಗಿ ಖ್ಯಾತನಾಮರು. ಅವರು ಕಾನೂನಿಗೆ ಸಂಬಂಧಪಟ್ಟ ಈ ಪುಸ್ತಕ ಬರೆಯಲು ಕಾರಣ, ಪ್ರೇರಣೆ ಏನು ಎನ್ನುವುದು ಒಂದು ಕುತೂಹಲಕ್ಕೆ ಕಾರಣವಾಗಬಹುದಾಗಿದೆ. ಇದಕ್ಕೆ ಉತ್ತರ ಹೀಗಿದೆ: ಸಾಹಿತ್ಯ ಎಂದರೆ ಜೀವನ ಪ್ರೀತಿ, ಜೀವಪರ ನೀತಿ ಎಂದೇ ಅರ್ಥ ಅಲ್ಲವೇ? ಅಂದ ಮೇಲೆ ಜೀವನವನ್ನು ಸಹ್ಯವಾಗಿಸುವ, ಬದುಕನ್ನು ಕಟ್ಟಿಕೊಡುವ ಎಲ್ಲಾ ಕ್ರಿಯೆಗಳೂ ಅದರ ವ್ಯಾಪ್ತಿಯೊಳಗೆ ಸಹಜವಾಗಿ ಬರುತ್ತವೆ. ಜೊತೆಗೆ ಅವರ ಕಾನೂನು ಆಧ್ಯಯನದ ಪದವಿ ಕೂಡಾ ಈ ಪುಸ್ತಕಕ್ಕೊಂದು ಅಧಿಕೃತ ಮುದ್ರೆಯನ್ನೂ ಒತ್ತಿದೆ ಎಂಬುದೂ ಸತ್ಯ. ಪದ್ಮರಾಜ ದಂಡಾವತಿಯವರು ಪುಸ್ತಕಕ್ಕೆ ಬರೆದ ತಮ್ಮ ಮುನ್ನುಡಿಯಲ್ಲಿ ಇದನ್ನು ಸರಿಯಾಗಿಯೇ ಗುರುತಿಸಿದ್ದಾರೆ: “ಸಾಹಿತ್ಯಕ್ಕೂ, ಕಾನೂನಿಗೂ ಎಲ್ಲಿಯೋ ಒಂದು ಆಳವಾದ ಸಂಬಂಧ ಇರುವಂತೆ ಕಾಣುತ್ತದೆ ಮತ್ತು ಸಾಹಿತ್ಯ ಕೊಡುವ ತಿಳುವಳಿಕೆ ಕಾನೂನಿನ ತಪ್ಪುಗಳ ಜೊತೆಗೆ ಸದಾ ಸಂಘರ್ಷ ಮಾಡುತ್ತಾ ಇರುವಂತೆಯೂ ಕಾಣುತ್ತದೆ… ಈ ಸಂಘರ್ಷದ ಮುಂದುವರಿಕೆಯಾಗಿಯೇ ರಾಮಚಂದ್ರನ್ ಅವರು ಈ ಪುಸ್ತಕವನ್ನು ಬರೆದಿದ್ದಾರೆ. ಅವರು ಕೇವಲ ಕಾನೂನಿನ ವಿದ್ಯಾರ್ಥಿಯಾಗಿದ್ದರೆ ಈ ಪುಸ್ತಕ ಈಗಿನ ಸ್ವರೂಪದಲ್ಲಿ ಇರುತ್ತಿರಲಿಲ್ಲ ಎಂದೂ ಧೈರ್ಯವಾಗಿ ಹೇಳಬಹುದು. ಅಂದರೆ ಪ್ರೊ. ಸಿ.ಎನ್.ಆರ್. ಅವರು ಸಾಹಿತ್ಯದ ವಿದ್ಯಾರ್ಥಿ ಎಂಬ ಕಾರಣಕ್ಕಾಗಿಯೇ ಈ ಪುಸ್ತಕದ ವಸ್ತು ಅವರನ್ನು ಹೆಚ್ಚು ಕಾಡಿದೆ ಎಂದೂ ನಾವು ಅರ್ಥೈಸಬಹುದು. ಏಕೆಂದರೆ ಸಾಹಿತ್ಯ ನಮಗೆ ಕಲಿಸುವುದು ಮನುಷ್ಯ ಪ್ರೀತಿಯನ್ನು ಮತ್ತು ಜೀವಪರತೆಯನ್ನು. ಬರೀ ಕಾನೂನಿನ ಜ್ಞಾನ ಇದನ್ನು ಕಲಿಸುವುದಿಲ್ಲ. ಶಾಸನ ರೂಪಿಸುವ ರಾಜಕಾರಣಿ ಸಾಹಿತ್ಯವನ್ನು ಓದಬೇಕಾದುದು ಈ ಕಾರಣಕ್ಕಾಗಿ, ಈ ಜೀವಪರತೆಯನ್ನು ಗಳಿಸಬೇಕಾದ ಅಗತ್ಯಕ್ಕಾಗಿ.”                             ಭಾರತೀಯ ದಂಡ ಸಂಹಿತೆ ಬ್ರಿಟಿಷರಿಂದ ನಮಗೆ ಬಂದ ಬಳುವಳಿ! ತಮ್ಮ ಸ್ವಾರ್ಥ-ಸಾಧನೆಗಾಗಿ ಇಲ್ಲಿ ಬಂದ ಬ್ರಿಟಿಷರು ಆಡಳಿತದ ಜೊತೆಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಕಾನೂನುಗಳನ್ನು ರಚಿಸಿದ್ದು (ರೈಲ್ವೆ, ಪೋಸ್ಟಲ್ ವ್ಯವಸ್ಥೆಯನ್ನು ಸ್ಥಾಪಿಸಿದ್ದು ಇತ್ಯಾದಿ) ಮತ್ತು ನಮಗೆ ಅವು ಇಂದಿಗೂ ಪ್ರಮಾಣಗಳಾಗಿ ಉಳಿದಿವೆಯೆಂದರೆ ಅದು ನಮ್ಮ ಆತ್ಮವಿಮರ್ಶೆಗೆ ಒಡ್ಡಿದ ಸವಾಲು ಎಂದೇ ಅರ್ಥವಲ್ಲವೇ? ಸ್ವಾತಂತ್ರ್ಯ ಸಿಕ್ಕಿ ಎಪ್ಪತ್ತೈದು ವರ್ಷಗಳಾದರೂ ಇಂದಿನ ಪರಿಸ್ಥಿತಿಗನುಗುಣವಾಗಿ ಈ ಕಾನೂನುಗಳ ಸಮಗ್ರ ಪರಿಷ್ಕರಣೆ ಆಗಬೇಕೆಂದು ಕಾನೂನು ಪಂಡಿತರಾದಿಯಾಗಿ ಪರಿಣಿತರೆಲ್ಲರೂ ಹೇಳುತ್ತಿದ್ದರೂ ಅದು ಈ ವರೆಗೂ ತೃಪ್ತಿಕರವಾಗಿ ಸಾಧ್ಯವಾಗಿಲ್ಲ ಎನ್ನುವುದು ಸತ್ಯ. ಈ ಕುರಿತು ಲೇಖಕರಿಗೂ ವಿಷಾದವಿದೆ. ನಮ್ಮ ಕೋರ್ಟು ಕಛೇರಿಗಳು ‘justice delayed is justice denied’ ಎನ್ನುವ ಮಾತಿಗೆ ಪುಷ್ಟೀಕರಣ ನೀಡುವ ತಾಣಗಳಾಗಿವೆ ಎಂಬುದಕ್ಕೆ ಬಾಕಿ ಉಳಿದಿರುವ ಖಟ್ಲೆಗಳ ಸಂಖ್ಯೆಯೇ ನಿರ್ವಿವಾದ ಪುರಾವೆ. ಒಂದು ಅಂದಾಜಿನ ಪ್ರಕಾರ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ವಿಚಾರಣಾಧೀನ ಕೈದಿಗಳಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರಿಗೆ ತಾವು ಮಾಡಿದ ಅಪರಾಧವೇನು ಎಂಬುದೇ ಗೊತ್ತಿಲ್ಲ, ಜೊತೆಗೆ ಅವರಲ್ಲಿ ಹೆಚ್ಚಿನವರು ಅತ್ಯಂತ ಕೆಳವರ್ಗದ ಬಡಜನರು ಎನ್ನುವ ವಿಡಂಬನೆಯೂ ಇರುವುದು ಕಹಿ ಸತ್ಯ. ದೇಶದ ಅತೀ ದೊಡ್ಡ ಕಾರಾಗ್ರಹ ದೆಹಲಿಯ ತಿಹಾರ್ ಜೈಲು ಇದಕ್ಕೆ ಸಾಕ್ಷಿ. ಕಿರಣ್ ಬೇಡಿಯವರು ಇಲ್ಲಿನ ಮುಖ್ಯಸ್ಥರಾಗಿದ್ದ ಸಮಯದಲ್ಲಿ ಅವರು ಕೈಗೊಂಡ ಸುಧಾರಣೆಗಳ ಹೊರತು ಬೇರೇನೂ ಇಂದಿಗೂ ಆಗಿಲ್ಲ. ನಮ್ಮಲ್ಲಿ ಕಾನೂನುಗಳ ಕೊರತೆಗಿಂತ ಇರುವ ಅಸಂಖ್ಯಾತ ಕಾನೂನುಗಳನ್ನು ಸಮರ್ಪಕವಾಗಿ ಜಾರಿಗೊಳಿಸದಿರುವುದೇ ಅತೀ ದೊಡ್ಡ ಸಮಸ್ಯೆ. ಇದನ್ನು ಇಲ್ಲಿ ಪ್ರಸ್ತಾಪಿಸಲು ಕಾರಣ ಏನೆಂದರೆ ಈ ಹಿನ್ನೆಲೆಯ ಅರಿವಿಲ್ಲದೇ ನಮ್ಮ ನ್ಯಾಯಾಂಗ ವ್ಯವಸ್ಥೆಯನ್ನು ಸುಧಾರಿಸಲಾಗಲಿ, ಅರ್ಥೈಸಿಕೊಳ್ಳಲಾಗಲಿ ಸಾಧ್ಯವಿಲ್ಲ. ಕಣ್ಣಿಗೆ ಕಪ್ಪುಬಟ್ಟೆ ಕಟ್ಟಿಕೊಂಡ ನ್ಯಾಯದೇವತೆ justice without discrimination ಗೆ ಸಮರ್ಥ ರೂಪಕವಾಗಿದ್ದೂ –- ಮಹಾಭಾರತದ ಗಾಂಧಾರಿಯಂತೆ — ವಸ್ತುಸ್ಥಿತಿಗೂ ಅಷ್ಟೇ  ಕುರುಡಾಗಿರುವುದೂ ಒಂದು ವ್ಯಂಗ್ಯವಲ್ಲದೆ ಮತ್ತೇನು? ಮಹಿಳೆಯ ದುಸ್ಥಿತಿಗೆ ಎರಡು ಕಾರಣಗಳನ್ನು ಪ್ರೊ. ಸಿ.ಎನ್.ಆರ್. ನೀಡುತ್ತಾರೆ: “ಮೊದಲಿಗೆ ಮಹಿಳೆ ತನ್ನ ಆರ್ಥಿಕ ಸ್ವಾತಂತ್ರ್ಯವನ್ನು ಕಳೆದುಕೊಂಡಳು (ಕ್ರಿ.ಶ. ಮೂರನೆಯ ಶತಮಾನದಿಂದ); ನಂತರ, ಶಿಕ್ಷಣಾವಕಾಶಗಳಿಂದ ವಂಚಿತಳಾದಳು. ಪರಿಣಾಮತಃ ಸಮಾಜದಲ್ಲಿಯೂ ತನ್ನ ಸ್ಥಾನ-ಮಾನಗಳನ್ನು ಕಳೆದುಕೊಂಡು ಸಂಪೂರ್ಣವಾಗಿ ಪರಾವಲಂಬಿಯಾದಳು.” ಇವೆರಡೂ ಸಾಧನಗಳಿದ್ದೂ ಮಹಿಳೆ ಸುರಕ್ಷಿತಳಲ್ಲ ಎನ್ನುವುದಕ್ಕೆ ‘ರೂಪನ್ ಬಜಾಜ್ – ಕೆ.ಪಿ.ಎಸ್. ಗಿಲ್ ಪ್ರಕರಣ’ (ಪು.೯೦) ಮತ್ತು ‘ರೀನಾ ಮುಖರ್ಜಿ – ಸ್ಟೇಟ್ಸ್ ಮನ್ ಪತ್ರಿಕಾ ಸಂಸ್ಥೆ’ (ಪು.೦೩-೯೫) ಕೇಸ್-ಗಳೇ ಸಾಕ್ಷಿ. ಹಾಗಿದ್ದರೆ ಇದಕ್ಕೆ ಆತ್ಯಂತಿಕವಾದ ಕಾರಣವೇನೆಂದು ಹುಡುಕಿದರೆ ಅದು ಆಕೆ ‘ಮಹಿಳೆ’ಯಾಗಿರುವುದೇ, ಅಂದರೆ ಇನ್ನೂ ಸ್ಪಷ್ಟವಾಗಿ ಹೇಳುವುದಾದರೆ ‘ಲೈಂಗಿಕತೆ – sexually desirable, and vulnerable too – ಭೋಗವಸ್ತು’ವಾಗಿ  ಎಂಬ ಸಾರ್ವಕಾಲಿಕ ಸತ್ಯ ಮುಖಕ್ಕೆ ರಾಚುವಂತೆ ಎದ್ದು ಕಾಣುತ್ತದೆ. ಇದು ಎಲ್ಲಾ ಕಾಲಕ್ಕೂ, ಎಲ್ಲಾ ಸಮಾಜಗಳಲ್ಲಿಯೂ ಇದ್ದಂತಹ, ಇರುವಂತಹ ಸಮಸ್ಯೆ. ಹಾಗಿದ್ದಾಗಲೂ ಕೂಡಾ ಮಹಿಳೆಯರ ಸಬಲೀಕರಣಕ್ಕೆ ಒತ್ತು ಕೊಡುವ, ಜೊತೆಗೆ ಅವರಿಗೆ ರಕ್ಷಣೆ ಕೊಡುವ ಕೆಲಸ ಜೊತೆ ಜೊತೆಯಾಗಿ ಸಾಮಾಜಿಕ-ನೈತಿಕ-ಕಾನೂನಾತ್ಮಕ ನೆಲೆಗಳಲ್ಲಿ ಸಾಗಬೇಕಾದ ಅನಿವಾರ್ಯತೆ ಎಲ್ಲಾ ನಾಗರೀಕ ಸಮಾಜದ ಜವಾಬ್ದಾರಿ ಎನ್ನುವುದನ್ನು ಮರೆಯಲಾಗದು. ಈ ನಿಟ್ಟಿನಲ್ಲಿ ರಚಿತವಾಗಿರುವ ಕಾನೂನುಗಳ ಪರಿಚಯ ಹಾಗೂ ಜ್ಞಾನ ಎಲ್ಲರಿಗೂ ಇರಬೇಕಾದ ಆವಶ್ಯಕತೆ ಇದೆ. ಹಾಗಾಗಿ ಈ ಪುಸ್ತಕದ ಪ್ರಸ್ತುತತೆ, ಮೌಲಿಕತೆ ಪ್ರಶ್ನಾತೀತ.  ಯಾಕೆಂದರೆ ignorance of law is not an excuse to violate law nor it is a license to commit any crime! ಕಾನೂನಿನ ಕುರಿತು ಅಜ್ಞಾನಿಯಾಗಿರುವುದು ಅಪಾಯಕ್ಕೆ ಆಹ್ವಾನವಿತ್ತಂತೇ ಸರಿ. ‘ಸೆಕ್ಷನ್ ೪೯೪ ಮತ್ತು ೪೯೮ ಎ’ – ವರದಕ್ಷಿಣೆ ಮತ್ತು ಕೌಟುಂಬಿಕ ಹಿಂಸೆಗೆ ಸಂಬಂಧಿಸಿದ ಕಾನೂನುಗಳ ಉಪಯುಕ್ತತೆ ಹಾಗೂ ವ್ಯತಿರಿಕ್ತ ಪರಿಣಾಮಗಳ ಕುರಿತು ಸಾಕಷ್ಟು ಉದಾಹರಣೆಗಳ ಮೂಲಕ ವಿವರಿಸುತ್ತಾ ಸಿ.ಎನ್.ಆರ್. ಅವರು ಹೇಳುವ ಈ ಮಾತು ಮಾರ್ಮಿಕವಾಗಿದೆ: “ಈ ಜಗತ್ತಿನಲ್ಲಿ ಲೈಂಗಿಕ ಕಾಮದಂತೆಯೇ ಅರ್ಥ ಕಾಮವೂ ಕೂಡಾ ಎಂದಿಗೂ ಶಮನವಾಗದ ವ್ಯಸನವೆಂದು ಕಾಣುತ್ತದೆ.” ಲೈಂಗಿಕತೆ ಜೀವಿಯ ಆದಿಮ ಪ್ರವೃತ್ತಿಯಾಗಿಯೂ ಗುರುತಿಸಲ್ಪಟ್ಟಿದೆ ತಾನೇ? “ಆಹಾರ, ನಿದ್ರಾ, ಭಯ, ಮೈಥುನಂಚ ಸಾಮಾನ್ಯಮೇತತ್ ಪಶುಭಿಃ ನರಣಾಮ್ | ಧರ್ಮೋಹಿ ತೇಷಾಂ ಅಧಿಕೊ ವಿಶೇಷಃ ಧರ್ಮೇಣ ಹೀನಃ ಪಶುಭಿಃ ಸಮಾನಃ||” ಸಕಲ ಚರ ಜೀವಿಗಳಿಗೆ ಅನ್ವಯವಾಗುವ ‘ಪ್ರಕೃತಿ ಧರ್ಮ ಚತುಷ್ಟಯ’ಗಳೆಂದರೆ ಆಹಾರ, ನಿದ್ರಾ, ಭಯ, ಮತ್ತು ಮೈಥುನ. ಹಾಗಾದರೆ ಪ್ರಾಣಿಗಳನ್ನೂ ಮನುಷ್ಯರನ್ನೂ ಪ್ರತ್ಯೇಕವಾಗಿಸುವಂಥದ್ದು ಏನು? ಅದೇ ಧರ್ಮ = ವಿವೇಕ = ಸರಿ, ತಪ್ಪುಗಳ ವಿವೇಚನೆ; ಅದೊಂದಿಲ್ಲದಿದ್ದರೆ ಮನುಷ್ಯನೂ ಪಶುವೇ ಸರಿ.’ ಯಾವಾಗ ಮನುಷ್ಯ ವಿವೇಚನಾರಹಿತನಾಗುತ್ತಾನೋ ಆಗೆಲ್ಲಾ ಅವನನ್ನು ಕಾನೂನಿನ ಅಂಕುಶದಿಂದ ನಿಯಂತ್ರಿಸುವ ಕೆಲಸ ಆಗಬೇಕಾದದ್ದೇ.  ‘ಸೆಕ್ಷನ್ ೪೯೮ ಎ’ ಅಡಿಯಲ್ಲಿ ಮಹಿಳೆಗೆ ನೀಡಿದ ಸ್ವಾತಂತ್ರ್ಯದ ದುರುಪಯೋಗ ನಡೆದು “ಗಂಡನನ್ನು ಹಾಗೂ ಗಂಡನ ಮನೆಯಲ್ಲಿರುವ ಅವನ ತಂದೆ, ತಾಯಿ, ಅಣ್ಣ, ತಮ್ಮಂದಿರು, ಅಕ್ಕ, ತಂಗಿಯರು ಎಲ್ಲರನ್ನೂ ತಮ್ಮ ಅಂಕೆಯಲ್ಲಿಟ್ಟುಕೊಳ್ಳಲು ಅವರ ಮೇಲೆ ಸುಳ್ಳು ದೂರು ಕೊಟ್ಟು ಅವರೆಲ್ಲರನ್ನೂ ಜೈಲಿಗೆ ಅಟ್ಟುವ ಘಟನೆಗಳು ಮರುಕಳಿಸಲಾರಂಭಿಸಿದುವು.” (ಪು.೪೩). ಇದು ಸತ್ಯಸ್ಯ ಸತ್ಯ. ಹೆಚ್ಚನ ವಿವರಗಳಿಗೆ ‘ನಿಶಾ ಶರ್ಮ ಮೊಕದ್ದಮೆ’ (ಪು.೪೩-೪೬) ಮತ್ತು ‘ಅರ್ಣೆಶ್ ಕುಮಾರ್ ವರ್ಸಸ್ ಸ್ಟೇಟ್ ಆಫ್ ಬಿಹಾರ್’ ಮತ್ತು ‘ರಾಜೇಶ್ ಶರ್ಮಾ ಮೊಕದ್ದಮೆ’ (ಪು.೪೬-೪೯) ನೋಡಿ.  ಆದರೆ ಈ ‘ಆತಿರೇಕ’ವನ್ನು ಶತಮಾನಗಳಿಂದ ಶೋಷಣೆಗೆ ಪರ್ಯಾಯ ಹೆಸರೇ ಆದ ‘ಮಹಿಳೆ’ ತನ್ನಲ್ಲಿ ಅಂತಸ್ಥವಾಗಿದ್ದ, ಮಡುಗಟ್ಟಿದ್ದ ನೋವನ್ನು ಹೊರಹಾಕಿದ ಒಂದು ಸಾಮಾಜಿಕ ಸಂಕಥನವಾಗಿ (ವೃಥಾ ಶೋಷಿತರನ್ನು ಹೊರತುಪಡಿಸಿ) ನೋಡಿದರೆ ಆ ನೋವಿನ ಆಳ, ಅಗಲ, ವಿಸ್ತಾರ ಮನವರಿಕೆಯಾದೀತು! ಇದು ಮಹಿಳೆಯರ ಅತಿರೇಕ ವರ್ತನೆಗೆ ಸಮಜಾಯಿಷಿಕೆ ಅಲ್ಲ ಎನ್ನುವುದನ್ನು ಒತ್ತಿ ಹೇಳುತ್ತಿದ್ದೇನೆ. ಇದನ್ನು ಸಿ.ಎನ್.ಆರ್. ಅವರು ಗುರುತಿಸುವುದು ಹೀಗೆ: “ಯಾವುದೇ ಅವಕಾಶವಾಗಲಿ ಕಾನೂನು ಆಗಲಿ ಅದರ ಉದ್ದೇಶವನ್ನು ಮರೆತು ಅದನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುವುದು ಮನುಷ್ಯ ಸ್ವಭಾವ. ಈ ಹೇಳಿಕೆ ಸ್ತ್ರೀ-ಪರ ಕಾನೂನುಗಳಿಗೂ – ವಿಶೇಷವಾಗಿ ೪೯೮-ಎ ಸೆಕ್ಷನ್ ಗೆ – ಅನ್ವಯಿಸುತ್ತದೆ. (ಪು.೪೩)” ಅಂತೆಯೇ “ಮಹಿಳೆಯನ್ನು ನೋಡುವ, ಸ್ವೀಕರಿಸುವ ಸ್ತ್ರೀ-ಪುರುಷರ ಮನೋಭಾವ ಬದಲಾಗದಿದ್ದರೆ ಯಾವ ಕಾನೂನೂ ಅಥವಾ ಯೋಜನೆಯೂ ಸಂಪೂರ್ಣವಾಗಿ ಯಶಸ್ವಿಯಾಗುವುದಿಲ್ಲ ಎಂಬ ಖೇದಕರ ಸತ್ಯ ಸ್ಪಷ್ಟವಾಗುತ್ತದೆ. (ಪು.೫೪)”. ಈ ಒಳನೋಟಗಳು ಕೇವಲ ಶುಷ್ಕ ಕಾನೂನು ಪಾಂಡಿತ್ಯದಿಂದ ಸಾಧಿತವಾಗಲಾರದು; ಅದು ಸಾಹಿತ್ಯಮೂಲದ ಸಂವೇದನೆ – ಮನುಷ್ಯ ಸ್ವಭಾವಕ್ಕೊಂದು ಭಾಷ್ಯ ಎನ್ನುವುದೇ ಸರಿಯಾದ ಮಾತು. ಮಹಿಳೆಯ ಮೇಲೆ ನಡೆಯುವ ಅತ್ಯಂತ ಹೀನಾಯ, ಹೇಯ, ಅಮಾನವೀಯ, ಬರ್ಬರ ಕೃತ್ಯವೆಂದರೆ ಅತ್ಯಾಚಾರ. ನಮ್ಮ ನ್ಯಾಯಿಕ ವ್ಯವಸ್ಥೆ ಸಾಕ್ಯಾಧಾರಿತವಾದದ್ದು – evidence-based. ಇದೊಂದೇ ಕಾರಣಕ್ಕೆ, ಅಂದರೆ ಸಾಕ್ಷಿಯ ಕೊರತೆಯಿಂದ  ಅತ್ಯಾಚಾರದ ಕೇಸುಗಳು ಹೆಚ್ಚಿನ ಸಂದರ್ಭಗಳಲ್ಲಿ ಬಿದ್ದು ಹೋಗುತ್ತವೆ. ಈ ಕೇಸುಗಳ ವಿಚಾರಣಾ ವಿಧಾನ, ವೈದ್ಯಕೀಯ ಪರೀಕ್ಷಾ ವಿಧಾನ (ಈಗ ನಿಷೇಧಿಸಲ್ಪಟ್ಟ ಕುಖ್ಯಾತ  two finger-test) ಎಲ್ಲವೂ ಆ ದುರ್ಘಟನೆಯನ್ನು ಮತ್ತೆ ಮತ್ತೆ ಮಾನಸಿಕವಾಗಿ ಪುನರಾವರ್ತಿಸುತ್ತ, ಮಹಿಳೆಯ ಆತ್ಮಾಭಿಮಾನವನ್ನೇ ನಾಶಮಾಡುತ್ತವೆ. ಕಾನೂನಿಗೆ ಆದ ಹಲವು ತಿದ್ದುಪಡಿಗಳಲ್ಲಿ, ಅತ್ಯಾಚಾರಕ್ಕೆ ಸಂಬಂಧಿಸಿದಂತೆ, ನನಗೆ ಮಹತ್ವದ್ದೆಂದು ಕಂಡು ಬಂದದ್ದು ಇದು: ಸಾಕ್ಷ್ಯ ಶಾಸನ, ಸೆಕ್ಷನ್

ಮಹಿಳೆ ಮತ್ತು ಭಾರತೀಯ ಕಾನೂನು ವ್ಯವಸ್ಥೆ – ಸಿ.ಎನ್. ರಾಮಚಂದ್ರನ್: Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಶ್ರೀದೇವಿ ಕೆರೆಮನೆ ನೀನು ಮತ್ತೆ ಬರುವುದಿಲ್ಲವೆಂದು ಬುದ್ಧಿಗೆ ಅರ್ಥವಾಗಿದೆಹಾಳಾದ ಮನಸ್ಸು ಇನ್ನೂ ನಿನಗಾಗಿ ಕಾತರಿಸುತ್ತಿದೆ ಹೀಗೆ ಬಂದು ಹಾಗೆ ಹೋಗಲು ನಾನೇಕೆ ಬೇಕಿತ್ತು ಹೇಳುನನ್ನ ಮನೆಯಂಗಳದ ಮಲ್ಲಿಗೆ ನಿನಗೀಗ ಮರೆತು ಹೋಗಿದೆ ಅಗಲುವ ಮಾತಾಡಿದ್ದು ಇಂದು, ನಿರ್ಧಾರ ಎಂದಾಗಿತ್ತು?ಮಾಮರದ ಕೋಗಿಲೆಯೇಕೆ ಹೀಗೆ ಕರ್ಕಶವಾಗಿ ಅಳುತಿದೆ ಕೊನೆಯ ಕ್ಷಣದವರೆಗೂ ಗುಟ್ಟು ಬಿಡದ ಮಹಾ ಚತುರ ನೀನುನೆತ್ತರಿಲ್ಲದೇ ಇರಿಯುವುದನು ನಿನ್ನಿಂದ ಕಲಿಯಬೇಕಿದೆ ನಾಟಕದ ಮಂದಿರದಲ್ಲೀಗ ಕಣ್ಣು ಕುಕ್ಕುವ ಬೆಳಕಿಲ್ಲಮನಸನು ಬಲಿ‌ಪಡೆದ ಪ್ರಹಸನವು ಜಗಜ್ಜಾಹೀರಾಗಿದೆ ನಿನ್ನವಳೆಂಬ ಹೆಮ್ಮೆ ಎದೆಯೊಳಗೆ ಮೊರೆದು ನೆತ್ತಿಗೇರಿತ್ತುಸುರೆಗೂ ಮಿಗಿಲಾಗಿ ಆವರಿಸಿದ ಯೌವನದ ನಶೆ ಇಳಿದಿದೆ ಸದಾ ಜೊತೆಗಿದ್ದ ಗೆಲುವಿಗು ನಾನೆಂದರೀಗ ತಿರಸ್ಕಾರಎಂದು ಬತ್ತದ ಉಕ್ಕುವ ಸೆಲೆಯಂತಹ ತುಟಿಯ ನಗು ಮಾಸಿದೆ ಶ್ರೀ, ಎರಡು ದಿನ ನಿನ್ನ ಹೆಸರಿನ ಸೆರಗಿನಲ್ಲಿ ಮೆರೆದಾಡಿದೆಮೇಲಕ್ಕೇರಿ ಕೆಳಗಿಳಿದ ಮೇಲೀಗ ಬದುಕು ಸಾಕೆನಿಸಿದೆ ***************************************************************

ಗಝಲ್ Read Post »

ಇತರೆ, ಜೀವನ

ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..!

ಲೇಖನ ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..! ಕೆ.ಶಿವು ಲಕ್ಕಣ್ಣವರ ಹಿಂದಿ ಹೇರಿಕೆಯು ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..! ಕರ್ನಾಟಕದಲ್ಲಿ ಎರಡು ವರ್ಷಗಳ ಹಿಂದೆ ಕೇಂದ್ರ ಸರ್ಕಾರದ ಅಣತಿ ಮೇರಗೆ ಬೆಂಗಳೂರು ಮೆಟ್ರೋ ಆಡಳಿತ ಮಂಡಳಿ ಇಲ್ಲಿನ ಮೆಟ್ರೋ ನಿಲ್ದಾಣಗಳಲ್ಲಿ ಹಿಂದಿ ಭಾಷೆಯಲ್ಲಿ ಫಲಕಗಳನ್ನು ಹಾಕಿದಾಗಲೇ ಸ್ಥಳೀಯ ಕನ್ನಡಪರ ಹೋರಾಟಗಾರರು ಹಿಂದಿ ಫಲಕಗಳಿಗೆ ಬಣ್ಣ ಬಳಿದು ಪ್ರತಿಭಟಿಸಿದ್ದರು. ಈ ಸಂದರ್ಭದಲ್ಲಿ ಸಂವಿಧಾನದಲ್ಲಿ ಯಾವ ಭಾಷೆಗೂ ರಾಷ್ಟ್ರಭಾಷೆ ಎಂಬ ವಿಶೇಷ ಸ್ಥಾನಮಾನ ನೀಡಲಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿತ್ತು. ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು; ಹಿಂದಿ ಹೇರಿಕೆಯ ವಿರುದ್ಧ ರಾಜ್ಯ ನಾಯಕರು ಕೆಂಡಾಮಂಡಲವಾಗಿದ್ದರು. ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ತಣ್ಣಗಾಗಿದ್ದ ಹಿಂದಿ ಹೇರಿಕೆಯ ಪರ-ವಿರೋಧದ ಚರ್ಚೆ ಇದೀಗ ಮತ್ತೆ ಕಾವು ಪಡೆದುಕೊಂಡಿದೆ. ಇದಕ್ಕೆ ಕಾರಣ  ಕೇಂದ್ರ ಸರ್ಕಾರ ಹೇರಲು ಮುಂದಾಗಿರುವ ತ್ರಿಭಾಷಾ ನೀತಿ. ಕೇಂದ್ರ ಸರ್ಕಾರದ ಈ ನೀತಿಯ ವಿರುದ್ಧ ಇದೀಗ ಕರ್ನಾಟಕ ಮಾತ್ರವಲ್ಲ, ಇಡೀ ದಕ್ಷಿಣ ಭಾರತ ಸಿಡಿದೆದ್ದು ನಿಂತಿದ್ದು ರಾಜ್ಯ ನಾಯಕರು ಟೀಕಾಪ್ರಹಾರ ನಡೆಸಿದ್ದಾರೆ. ಪರಿಣಾಮ ಮುಂದಿನ ದಿನಗಳಲ್ಲಿ ಇದು ದೊಡ್ಡ ಹೋರಾಟವಾಗಿ ರೂಪಗೊಳ್ಳುವ ಎಲ್ಲಾ ಲಕ್ಷಣಗಳೂ ಕಾಣಿಸುತ್ತಿದೆ. ಕರ್ನಾಟಕದಲ್ಲಿ ಎರಡು ವರ್ಷಗಳ ಹಿಂದೆ ಕೇಂದ್ರ ಸರ್ಕಾರದ ಅಣತಿ ಮೇರಗೆ ಬೆಂಗಳೂರು ಮೆಟ್ರೋ ಆಡಳಿತ ಮಂಡಳಿ ಇಲ್ಲಿನ ಮೆಟ್ರೋ ನಿಲ್ದಾಣಗಳಲ್ಲಿ ಹಿಂದಿ ಭಾಷೆಯಲ್ಲಿ ಫಲಕಗಳನ್ನು ಹಾಕಿದಾಗಲೇ ಸ್ಥಳೀಯ ಕನ್ನಡಪರ ಹೋರಾಟಗಾರರು ಹಿಂದಿ ಫಲಕಗಳಿಗೆ ಬಣ್ಣ ಬಳಿದು ಪ್ರತಿಭಟಿಸಿದ್ದರು. ಈ ಸಂದರ್ಭದಲ್ಲಿ ಹಿಂದಿ ರಾಷ್ಟ್ರಭಾಷೆ ಎಂದು ಬಿಂಬಿಸಲಾಗಿತ್ತು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದ ಚರ್ಚೆಯೇ ನಡೆದಿತ್ತು. ಆದರೆ, ಈ ಸಂದರ್ಭದಲ್ಲಿ ಸಂವಿಧಾನದಲ್ಲಿ ಯಾವ ಭಾಷೆಗೂ ರಾಷ್ಟ್ರಭಾಷೆ ಎಂಬ ವಿಶೇಷ ಸ್ಥಾನಮಾನ ನೀಡಲಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿತ್ತು.  ಹೀಗಿದ್ದ ಮೇಲೆ ಕೇಂದ್ರ ಸರ್ಕಾರ ಮತ್ತೇ ದಕ್ಷಿಣ ರಾಜ್ಯಗಳ ಮೇಲೆ ಒತ್ತಾಯ ಪೂರ್ವಕವಾಗಿ ಹಿಂದಿ ಹೇರಿಕೆಗೆ ಮುಂದಾಗಿದೆ. ಇದಕ್ಕೆ ರಾಜ್ಯದಲ್ಲೂ ಸಹ ಪರ-ವಿರೋಧ ಚರ್ಚೆಗಳು ಶುರುವಾಗಿದೆ. ಹಾಗಾದರೆ ಏನಿದು ತ್ರಿಭಾಷಾ ನೀತಿ? ಇದಕ್ಕೆ ದಕ್ಷಿಣ ರಾಜ್ಯಗಳ ವಿರೋಧವೇಕೆ?..?– ಏನಿದು ತ್ರಿಭಾಷಾ ಸೂತ್ರ?— ಬಹುಭಾಷಾ ಸಂವಹನ ಕೌಶಲ್ಯವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ 1968 ರಲ್ಲೇ ಮೊದಲ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತ್ರಿಭಾಷಾ ಸೂತ್ರವನ್ನು ಪ್ರತಿಪಾದಿಸಲಾಗಿತ್ತು. 1986 ರ ನೀತಿಯಲ್ಲಿಯೂ ಇದನ್ನು ಪುನರುಚ್ಚರಿಸಲಾಗಿತ್ತು. ಇದರಂತೆಯೇ ದೇಶದಾದ್ಯಂತ ಶಾಲಾ ಮಕ್ಕಳಿಗೆ ಪ್ರಾಥಮಿಕ ಶಾಲಾ ಹಂತದಿಂದಲೇ ಅಲ್ಲಿನ ಸ್ಥಳೀಯ ಮಾತೃಭಾಷೆಯ ಜೊತೆಗೆ ಇಂಗ್ಲೀಷ್​ ಹಾಗೂ ತೃತೀಯ ಭಾಷೆಯಾಗಿ ಹಿಂದಿಯನ್ನೂ  ಕಲಿಸುವುದು ಈ ನೀತಿಯ ಉದ್ದೇಶವಾಗಿತ್ತು. ಆದರೆ, ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಭಾಷಾ ಹೇರಿಕೆಯಿಂದ ಒಂದು ಭಾಷೆ ಒಂದು ಸಂಸ್ಕೃತಿ ನಿರ್ಮಾಣವಾಗುತ್ತದೆ. ಇದರಿಂದ ದ್ರಾವಿಡ ಭಾಷೆಗಳ ಅಸ್ಮಿತೆಗೆ ಕೊಡಲಿ ಪೆಟ್ಟು ಬಿದ್ದಂಗಾಗುತ್ತದೆ. ಇದರಿಂದ ಮುಂದೊಂದು ದಿನ ದ್ರಾವಿಡ ಭಾಷೆಗಳು ಕಣ್ಮರೆಯಾಗುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರದ ಈ ನೀತಿಯನ್ನು 1969 ರಿಂದಲೂ ತೀವ್ರವಾಗಿ ವಿರೋಧಿಸುತ್ತಾ ಬಂದಿತ್ತು. ಒಂದು ಹಂತದಲ್ಲಿ ಸ್ವತಂತ್ರ್ಯ ದ್ರಾವಿಡ ರಾಷ್ಟ್ರದ ಪರಿಕಲ್ಪನೆಯನ್ನೂ ಮುಂದಿಟ್ಟಿತ್ತು. ಕೊನೆಗೆ ಕೇಂದ್ರದ ನೀತಿಗೆ ಬೆನ್ನು ತೋರಿಸಿದ್ದ ತಮಿಳುನಾಡು ಈವರೆಗೆ ದ್ವಿಭಾಷಾ ಸೂತ್ರವನ್ನು ಮಾತ್ರ ಅನುಸರಿಸುತ್ತಿದೆ. ತಮಿಳುನಾಡಿನಲ್ಲಿ ಕಳೆದ 6 ದಶಕದಿಂದ ಹಿಂದಿ ಕಲಿಕೆ ಕಡ್ಡಾಯವಲ್ಲ. ಇದರಂತೆ ಅಲ್ಲಿನ ಮಕ್ಕಳು ತಮಿಳು ಹಾಗೂ ಆಂಗ್ಲ ಭಾಷೆಯನ್ನು ಮಾತ್ರ ಕಲಿಯುತ್ತಿದ್ದಾರೆ. ಆದರೆ, ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಿ ಮಾತ್ರ ಹಿಂದಿಯನ್ನು ಸಾಮಾನ್ಯವಾಗಿ ಕಲಿಸಲಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ತಮಿಳುನಾಡನ್ನು ಗುರಿಯಾಗಿಸಿಕೊಂಡು ಮತ್ತೇ ತ್ರಿಭಾಷಾ ನೀತಿಯನ್ನು ಕಡ್ಡಾಯಗೊಳಿಸಲು ಮುಂದಾಗಿತ್ತು. ಆದರೆ, ಕೇಂದ್ರದ ಈ ನೀತಿಗೆ ಇದೀಗ ಕರ್ನಾಟಕ ಸೇರಿದಂತೆ ಉಳಿದೆಲ್ಲಾ ದಕ್ಷಿಣ ರಾಜ್ಯಗಳು ಒಮ್ಮೆಲೆ ತಿರುಗಿಬಿದ್ದಿವೆ. ರಾಜ್ಯದ ನಾಯಕರು ಹಿಂದಿ ಹೇರಿಕೆಯ ವಿರುದ್ಧ ಟೀಕಾಪ್ರಹಾರ ನಡೆಸುತ್ತಿರುವುದು ಕೇಂದ್ರಕ್ಕೆ ನುಂಗಲಾರದ ತುತ್ತಾಗಿದೆ..! ಕೇಂದ್ರ ಸರ್ಕಾರ ತ್ರಿಭಾಷಾ ನೀತಿಯನ್ನು ಕಡ್ಡಾಯಗೊಳಿಸುವ ತೀರ್ಮಾನ ಹೊರಬೀಳುತ್ತಿದ್ದಂತೆಯೇ ರಾಜ್ಯ ನಾಯಕರು ಇದನ್ನು ಸಾರಾಸಗಟಾಗಿ ಖಂಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ, ‘ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಹೊರಡಿಸಿದ ಶಿಕ್ಷಣ ಕರಡು ಕಾರ್ಯನೀತಿಯಲ್ಲಿ ಹಿಂದಿ ಹೇರಿಕೆಯ ಬಗ್ಗೆ ನನ್ನ ಗಮನಕ್ಕೆ ಬಂದಿದೆ. 3-ಭಾಷಾ ಸೂತ್ರದ ಹೆಸರಿನಲ್ಲಿ ಒಂದು ಭಾಷೆಯನ್ನು ಇತರರ ಮೇಲೆ ಯಾವ ಕಾರಣಕ್ಕೂ ಹೇರಬಾರದು. ಇದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ರಾಜ್ಯ ಸರ್ಕಾರದ ನಿಲುವನ್ನು ಕೇಂದ್ರಕ್ಕೆ ತಿಳಿಸಲಾಗುವುದು’ ಎಂದಿದ್ದರು. ಕುಮಾರಸ್ವಾಮಿ ಪ್ರತಿಕ್ರಿಯೆ ಹಿನ್ನೆಲೆಯಲ್ಲಿ ಇದೀಗ ಬಹುತೇಕ ರಾಜ್ಯದ ಎಲ್ಲಾ ನಾಯಕರು ಹಿಂದಿ ಹೇರಿಕೆಯ ವಿರುದ್ಧ ಕೂಗೆತ್ತಿದ್ದಾರೆ. ಕೇಂದ್ರ ಸರ್ಕಾರದ ತ್ರಿಭಾಷಾ ನೀತಿಯ ವಿರುದ್ಧ ಟ್ವೀಟ್ ಮಾಡುವ ಮೂಲಕ ಗುಡುಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಕನ್ನಡಿಗರ ಮೇಲೆ ಹಿಂದಿ ಹೇರಿಕೆಯನ್ನು ಸಹಿಸಲಾಗದು. ಕನ್ನಡ ನಮ್ಮ ಅಸ್ಮಿತೆ. ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನಪ್ರತಿನಿಧಿಗಳೆಲ್ಲರೂ ಪಕ್ಷಾತೀತವಾಗಿ ಚಿಂತನೆ ಮಾಡಬೇಕೆಂದು ನನ್ನ ಮನವಿ’ ಮಾಡಿದ್ದಾರೆ ಅವರು. ಮತ್ತೊಂದು ಟ್ವೀಟ್​ನಲ್ಲಿ, ‘ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೇ ಹೊರತು ಕಡ್ಡಾಯವಾಗಬಾರದು. ಇದು ಇನ್ನೊಂದು ಭಾಷೆಯ ಒತ್ತಾಯಪೂರ್ವಕ ಹೇರಿಕೆಯಂತಾಗಿದೆ. ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ. ಹಿಂದಿ ಭಾಷಿಗರಲ್ಲದವರ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಭಾರತ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಅವರು, ‘ಕೇಂದ್ರ ಸರ್ಕಾರ ಏಕಮುಖ ನಿರ್ಧಾರ ಕೈಗೊಳ್ಳುತ್ತಿದೆ. ನಾವೇನಾದರೂ ಹಿಂದೆ ಭಾಷೆಬೇಕೆಂದು ಕೇಳಿದ್ದೇವೆಯೇ? ಕೇಂದ್ರ‌ ಇದಕ್ಕೆ‌ ನೀತಿ ಜಾರಿಗೆ ತರುತ್ತಿರುವುದು ಕನ್ನಡಿಗರ ಮೇಲೆ ಬಲವಂತದ ಹಿಂದಿ ಹೇರಿಕೆಯಾಗಿದೆ. ನೆಲ‌, ಜಲ‌, ಭಾಷೆ ವಿಚಾರದಲ್ಲಿ ರಾಜಿ ಇಲ್ಲ. ಬಲವಂತವಾಗಿ ಯೋಜನೆ ಜಾರಿಗೆ ಮುಂದಾರೆ ನಾವು ತಮಿಳುನಾಡು ಮಾದರಿಯ ಹೋರಾಟ ಮಾಡಲೂ ಸಿದ್ಧ’ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ ಅವರು. ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರುದ್ಧ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್​ ಸಹ ಅಸಮಾಧಾನ ವ್ಯಕ್ತಪಡಿಸಿದ್ದರು, ‘ಕೇಂದ್ರ ಸರ್ಕಾರದ ಈ ನೀತಿ ರಾಜ್ಯಗಳ ಸಂವೇದನೆ ಹಾಗೂ ಉತ್ತಮ ಹಿತಾಸಕ್ತಿಗಳನ್ನು ಪ್ರತಿಬಿಂಬಿಸುವಂತಿರಬೇಕು. ಆದರೆ, ಈ ಭಾಷಾ ನೀತಿ ನಮ್ಮ ಹಿತಾಸಕ್ತಿಗೆ ಅನುಗುಣವಾಗಿಲ್ಲ. ಹೀಗಾಗಿ ನಮ್ಮ ರಾಜ್ಯದ ಮೇಲಿನ ಯಾವುದೇ ಭಾಷಾ ಹೇರಿಕೆಯನ್ನು ನಾವು ವಿರೋಧಿಸುತ್ತೇವೆ’ ಎಂದು ತಿಳಿಸಿದ್ದಾರೆ. ಒಟ್ಟಾರೆ ಕೇಂದ್ರದಲ್ಲಿ ಹೊಸ ಎರಡನೇ ಅವಧಿಗೆ ಬಿಜೆಪಿ ಸರ್ಕಾರ ಮತ್ತೇ ಅಧಿಕಾರ ಹಿಡಿದ ಕೇವಲ ಮೂರು ದಿನಗಳಲ್ಲಿ ದಕ್ಷಿಣ ಭಾರತದ ಮೇಲೆ ಹಿಂದಿ ಭಾಷೆ ಹೇರಿಕೆಗೆ ಮುಂದಾಗಿದೆ. ಈ ಹಿಂದೆಯೂ ಹಲವು ಬಾರಿ ಕೇಂದ್ರ ಸರ್ಕಾರ ಹಿಂದಿ ಹೇರಿಕೆಗೆ ಮುಂದಾದಾಗಲು ದಕ್ಷಿಣ ರಾಜ್ಯಗಳು ಅದರಲ್ಲೂ ಮುಖ್ಯವಾಗಿ ತಮಿಳುನಾಡು ಪ್ರಬಲವಾಗಿ ವಿರೋಧಿಸಿತ್ತು. ಇದೀಗ ಕರ್ನಾಟಕ, ಕೇರಳ ಹಾಗೂ ಆಂಧ್ರಪ್ರದೇಶ ಸಹ ಒಟ್ಟಾಗಿ ಕೇಂದ್ರದ ವಿರುದ್ಧ ಹಿಂದಿ ಹೇರಿಕೆ ವಿರೋಧದ ಹೋರಾಟಕ್ಕೆ ದನಿಗೂಡಿಸಿರುವುದು ಮುಂದಿನ ದಿನಗಳಲ್ಲಿ ದೊಡ್ಡ ಚಳುವಳಿಯಾಗಿ ರೂಪಗೊಂಡರೂ ಅಚ್ಚರಿ ಇಲ್ಲ. ಹೀಗಿರುವಾಗ ಹಿಂದಿ ಹೇರಿಕೆಯನ್ನು ಕೈಬಿಟ್ಟರೇ ಒಳಿತು..! *****************************************************************

ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..! Read Post »

ಕಾವ್ಯಯಾನ

ಸಿಂ(ಹ)ಪತಿ

ಕವಿತೆ ಸಿಂ(ಹ)ಪತಿ ವಿಶಾಲಾ ಆರಾಧ್ಯ ಮನದ ಮೆಟ್ಟಿಲುಗಳನೀ ಒಂದೊಂದಾಗಿಎಷ್ಟೇ ಬಾರಿ ಇಳಿದುಹೋದರೇನು ಗೆಳೆಯ ?ಮತ್ತೆ ಮತ್ತೆ ನೀ ಕೂರುವೆಬಂದು ಅಧಿಪತಿಯಾಗಿ …// ಒಡಲ ಕಣದಲಿನೀ ಅಂಗಾಂಗುಲವೂಎಷ್ಟೇ ಗಾಯಗೊಳಿಸಿಕೊರಗಿಸಿದರೇನು ಗೆಳೆಯ ?ಮತ್ತೆ ಮತ್ತೆ ನೀನೇ ಬರುವೆನನ್ನ ಭೂಪತಿಯಾಗಿ…// ಮೋಹಕ ನೋಟದಕಣ್ಣ ಕಂಬನಿಗೆನೀ ಕಾರಣವಾಗಿಎಷ್ಟೇ ಕಾಡಿದರೇನು ಗೆಳೆಯ ?ಆ ಕಣ್ಣ ಕನಸಲಿಮತ್ತೆ ಮತ್ತೆ ನೀನೇ ಬರುವೆನನ್ನ ಪತಿಯಾಗಿ…!!ಅದಕ್ಕೆ ನಾವಾಗಿರುವೆವುದಂಪತಿಯಾಗಿ …// ***************************

ಸಿಂ(ಹ)ಪತಿ Read Post »

ಕಾವ್ಯಯಾನ

ಒಂದು ಸಾಂದರ್ಭಿಕ ಚಿತ್ರ

ಕವಿತೆ ಒಂದು ಸಾಂದರ್ಭಿಕ ಚಿತ್ರ ಬಸವರಾಜ ಹೂಗಾರ ಕರಿಕಲ್ಲಿನ ಮೇಲೆಚಂದದ ನಾಮಫಲಕಚಿಕ್ಕ ಗೇಟುಎರಡು ಕುರ್ಚಿ ಹಾಕುವಷ್ಟೇ ವರಾಂಡಇಣುಕಿ ನೋಡಿದರೆದೊಡ್ಡ ಪಡಸಾಲೆಎರಡು ಕೋಣೆಗಳ ಮಧ್ಯೆಅಂಗೈಯಗಲದ ದೇವರಮನೆ.ಬಾಡಿಗೆ ಮನೆಯಲಿಇದ್ದೂ ಇದ್ದೂ ಸಾಕಾಗಿಸಾಕಿಷ್ಟು ನಮಗೆಎನ್ನುವಷ್ಟಿತ್ತು ಮನೆ. ರಸ್ತೆಯಲ್ಲಿ ಹೋಗುವಾಗಆ ಮನೆ ಈ ಮನೆಬಣ್ಣ ಬಣ್ಣದ ಮನೆಗಳನೂರು ನೋಟ ಆಸೆ ಕನಸುಗಳಗಿಲಕಿ ಹಳವಂಡಎಚ್ಚರಾದವನಿಗೆ ಲೋಕ ಸುಂದರ. ಎಲ್ಲ ಮನೆಗಳೂ ಚಂದಕಂಡವರ ಮನೆ ಸಿಟೌಟಿನಲಿಪೇಪರ್ ಓದುವವನು ನಾನೊಬ್ಬನೆ !ಹತ್ತುವಾಗ ಇಳಿಯುವಾಗಹೆಚ್ಚು ಕಂಡದ್ದು ಈ ಚಿಕ್ಕ ಮನೆಗಂಡ ವ್ಯಾಪಾರಿ ಹೆಂಡತಿ ಸಂಸಾರಿಕಂಪೌಂಡಿನಂಗಳದಲಿಗೆಜ್ಜೆ ಗಿಲಕಿಯ ಹೆಜ್ಜೆವೂರುವ ಮಗು. ಈ ಊರಲ್ಲೇ ಇದ್ದುಬಿಡಿತೆಗೆದುಕೊಳ್ಳಿ ಮನೆ ಇಲ್ಲ ಕಟ್ಟಿಸಿಸೈಟಾದರೂ ಇರಲಿದಿನಕ್ಕಿಷ್ಟು ಹಿತಚಿಂತಕರಮಾತಿನ ಏಣಿಗೆಹತ್ತವವನಿಗಿರಬೇಕು ‌ತಾಕತ್ತು. ರೂಮು ಖಾಲಿ ಮಾಡಿದೆ ಒಂದು ದಿನದಾಟಿ ತಿರುವಿನಲಿ ಹೊರಟೆಎದುರಿಗೆ ಬಂದಳು ಕೆಲಸದಾಕೆಮಾರುತ್ತಾರಂತೆ ಆ ಮನೆಕೇಳಿದೆನು ಸುಮ್ಮನೆ ಎಷ್ಟಂತೆ?ಕೋಟಿ ಒಂದೂವರೆಯಂತೆ. ತಿರುತಿರುಗಿ ಅದೇ ಕನಸುಅಲ್ಲಿದ್ದೆ ನಾನು ಅದೇ ಮನೆಯಲ್ಲಿ !ರಸ್ತೆಯಲಿ ರವಿವಾರ ಹೊರಟಿದ್ದೆಮನೆ ಮುಂದೆಅರೆ !ಒಡೆದು ಹಾಕಿದ್ದಾರೆ ಇಡೀ ಮನೆಖಾಲಿ ಸೈಟಿನಲ್ಲಿ ಬಿದ್ದಕೆಂಪು ಕಲ್ಲಿನ ಚೂರುಗಳುಒಡೆದವರಿಬ್ಬರ ಕೇಳಿದೆಯಾಕೆ ಒಡೆಯಲಾಯಿತು ಮನೆ ?ಒಡೆಯುವುದಷ್ಟೇ ನಮ್ಮ ಕೆಲಸಒಡೆ ಎಂದರು ಒಡೆದೆವು. ಒಡೆಯುವವರು ಕೂಲಿಯಾಳುಗಳುಒಡಿಸುವವರ ಅಂಗೈ ರಕುತದಲಿಎಷ್ಟು ಮನೆಗಳು ಕರಗಿದವೋಒಡೆಯುತ್ತಲೇ ಇದ್ದಾರೆ ಇನ್ನೂ…. ********************************************

ಒಂದು ಸಾಂದರ್ಭಿಕ ಚಿತ್ರ Read Post »

You cannot copy content of this page

Scroll to Top