ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ಜೀವನ

ಮದ್ಯಪಾನ ಮತ್ತು ಮಾದಕ ದ್ರವ್ಯಗಳ ನಿಷೇಧ

ಪ್ರಸ್ತುತ       ಮದ್ಯಪಾನ ಮತ್ತು ಮಾದಕ ದ್ರವ್ಯಗಳ ನಿಷೇಧದ ಕುರಿತು ಮಹಾತ್ಮ ಗಾಂಧೀಜಿ ಡಾ.ಎಸ್.ಬಿ. ಬಸೆಟ್ಟಿ ಮಹಾತ್ಮ ಗಾಂಧೀಜಿಯವರು ಜನರು ಬಯಸುವ ಹಾನಿಕಾರಕ ಮತ್ತು ಅನಾವಶ್ಯಕ ಮಾದಕ ವಸ್ತುಗಳನ್ನು  ವಿರೋಧಿಸುತ್ತಿದ್ದರು. ಗಾಂಧೀಜಿಯವರು ತಂಬಾಕು ಮತ್ತು ಮಧ್ಯವನ್ನು ಜನರ ಆರೋಗ್ಯಕ್ಕೆ ಅತ್ಯಂತ ಹಾನಿ ಕಾರಕ ವಸ್ತುಗಳೆಂದು ಪರಿಗಣಿಸಿದ್ದರು ಜೊತೆಗೇ ಚಹಾ ಮತ್ತು ಕಾಫಿಯನ್ನು ಕೂಡಾ ಅನಾವಶ್ಯಕ ವಸ್ತುಗಳೆಂದು ಭಾವಿಸಿದ್ದರು. “ಬೆಂಕಿ ದೇಹವನ್ನು ನಾಶ ಮಾಡಿದರೆ, ಮದ್ಯ ಮತ್ತು ಮಾದಕ ವಸ್ತು ದೇಹ  ಮತ್ತು ಆತ್ಮ ಎರಡನ್ನೂ ನಾಶ ಮಾಡುತ್ತದೆ” ಎಂದು ಮಹಾತ್ಮಾ ಗಾಂಧೀಜಿ ಹೇಳಿದ್ದಾರೆ. ವೈದ್ಯರು, ಮದ್ಯಪಾನಿಯಗಳು ಮತ್ತು ಅಫೀಮು ವ್ಯಸನಿಗಳನ್ನು ಈ ಶಾಪದಿಂದ ಹೊರತರುವ ದಾರಿಗಳನ್ನು ಕಂಡುಹಿಡಿಯಬೇಕು. ಪ್ರೀತಿಯಿಂದ ಈ ವ್ಯಸನಿಗಳನ್ನು ತಮ್ಮ ಮಾತು ಕೇಳುವಂತೆ ಮಾಡಿ ಅದರ ಸೇವನೆಯಿಂದಾಗುವ ಕೆಡಕನ್ನು ಅವರಿಗೆ ಮನದಟ್ಟು ಮಾಡಿ ಕೆಟ್ಟ ಚಟವನ್ನು ಬಿಡುವಂತೆ ಮನವರಿಕೆ ಮಾಡಬೇಕು ಎಂದಿದ್ದರು. ಮಾದಕ ವಸ್ತುಗಳಲ್ಲಿ ಹೊಗೆಸೊಪ್ಪು, ಭಂಗಿ, ಗಾಂಜಾ, ಅಫೀಮು, ಬ್ರಾಂದಿ, ವಿಸ್ಕಿ, ರಮ್ಮ, ಜಿನ್, ವೈನ್, ಶೇಂದಿ, ಸಾರಾಯಿ ಹೀಗೆ ಇನ್ನೂ ಹತ್ತು ಹಲವಾರು ಬಗೆಯ ವಸ್ತುಗಳು ಸೇರಿವೆ. ಇವುಗಳ ಅವಶ್ಯಕತೆ ನಮ್ಮ ಶರೀರಕ್ಕೆ ಖಂಡಿತಾ ಇಲ್ಲ. ಇವುಗಳಿಂದ ಶರೀರದ ಆರೋಗ್ಯ ಹಾಳಾಗಿ ಆರ್ಥಿಕವಾಗಿ ಸಂಸಾರ  ಸರ್ವನಾಶವಾಗುತ್ತದೆ. ಅಗೌರವಯುತ ಬಾಳು ದಕ್ಷತೆಗೆ ಕುಂದು ಮತ್ತು ದೇಶದ ಗೌರವಕ್ಕೆ ಚ್ಯುತಿ ತರುತ್ತದೆ. ಇದಕ್ಕೆ ದಾಸನಾದವನು ತನ್ನ ಮತ್ತು ಸಂಸಾರದ ಮಾನ ಮರ್ಯಾದೆಯನ್ನು  ಬೀದಿ ಬೀದಿಗಳಲ್ಲಿ ಹರಾಜು ಹಾಕುತ್ತಾನೆ.  ಈ ಮಾದಕ ವಸ್ತುಗಳನ್ನು ದೇಶದಿಂದ ಸಂಪೂರ್ಣವಾಗಿ ಪ್ರತಿಬಂಧಿಸಬೇಕೆಂಬುದು ಗಾಂಧೀಜಿಯವರ ಅದಮ್ಯ ಕನಸು. ಆದರೆ ಇಂದಿನ ಸರಕಾರಗಳು ಬದುಕಿರುವುದೇ ಅಬಕಾರಿ ಬಾಬ್ತಿನ ವರಮಾನದಿಂದ ಯಾವ ಪಕ್ಷದ ಸರ್ಕಾರಗಳಿದ್ದರೂ ಇದರ ಬಗೆ ಗಮನ ಹರಿಸಲು ಹಿಂಜರಿಯುತ್ತವೆ. ಗಾಂಧೀಜಿಯವರ ಪರಿಕಲ್ಪನೆಯ ಸಂಪೂರ್ಣ ಪಾನನಿಷೇದ ಎಂದೆಂದಿಗೂ ಸಾಧ್ಯವಾಗದಿರಬಹುದು. ಆದರೆ ಗುಜರಾತ್ ನಂತರ ಇತ್ತೀಚಿನ ವರ್ಷಗಳಲ್ಲಿ ಬಿಹಾರದಲ್ಲಿ   ಪಾನ ನಿಷೇದ ಜಾರಿಗೆ ಬಂದಿದೆ. ತಮಿಳುನಾಡು ಮೊದಲು ನಂತರ ಕರ್ನಾಟಕ ರಾಜ್ಯಗಳು ಸರಾಯಿ ನಿಷೇಧಿಸಿದವು. ಆದರೆ ಆ ನಂತರ ಹೆಚ್ಚೆಚ್ಚು ವೈನಶಾಪ ತೆರೆಯಲು ಅನುಮತಿ ನೀಡಿದವು. ಒಂದು ಅವಿವೇಕದ ವಾದವನ್ನು ಪ್ರತಿಪಾದಿಸುವವರು ಇದ್ದಾರೆ.  ಸ್ವಲ್ಪ (ಅತೀಕಡಿಮೆ) ಮಧ್ಯಪಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ. ಸರ್ವರೋಗಕ್ಕೂ ಸರಾಯಿ ಮದ್ದು ಎನ್ನುತ್ತಾರೆ. ಇಂದಿನ ಜಗತ್ತಿಗೆ ಸವಾಲಾಗಿರುವ ಮಹಾಮಾರಿ ಕೋವಿಡ-೧೯ ರೋಗಕ್ಕೂ ಸರಾಯಿ ಮದ್ದು ಎನ್ನುವವರಿದ್ದಾರೆ. ಆದರೆ ಈ ವಾದಕ್ಕೆ ಹುರುಳಿಲ್ಲ. ಪಾರ್ಸಿ ಜನಾಂಗದವರು ಹೆಂಡ ಕುಡಿಯುವುದನ್ನು ಒಳ್ಳೆಯದೆಂದು ಪ್ರತಿಪಾದಿಸುತ್ತಿದ್ದರು. ಇದು ಮಾದಕ ವಸ್ತುವಾದರೂ ಆಹಾರವೂ ಸಹ ಆಗಬಲ್ಲದು ಎಂದು ಹೇಳುತ್ತಿದ್ದರು. ಆದರೆ ತಜ್ಞರ ಪ್ರಕಾರ ಇದು ಸತ್ಯವಲ್ಲ. ‘ನೀರಾ’ ಭಟ್ಟಿ ಇಳಿಸಿದ ತಕ್ಷಣ ಮದ್ಯವಲ್ಲ. ನಿಜ ಅದು ಒಂದು ಆಹಾರ. ಇದನ್ನು ಕುಡಿದರೆ ಮಲಬದ್ಧತೆ ಇರುವುದಿಲ್ಲವೆಂದು ಕೇಳಿ ಗಾಂಧೀಜಿಯವರೇ ಕೆಲವು ದಿನಗಳ ಕಾಲ  ‘ನೀರಾ’ ಕುಡಿಯಲು ಪ್ರಾರಂಭಿಸಿದಾಗ ಅವರಿಗೆ ಅದರ ಉಪಯುಕ್ತತೆಯ ಅರಿವಾಗುತ್ತದೆ. ಪಾಮ್ ಜಾತಿಗೆ ಸೇರಿದ ತೆಂಗು, ಈಚಲು, ಖರ್ಜೂರ ಇತ್ಯಾದಿ ಇವುಗಳಲ್ಲಿ ಕಾಂಡ ಕೊರೆದು ತೆಗೆಯುವ ಬಣ್ಣವಿಲ್ಲದ ನೀರಿನಂತಹ ರಸಕ್ಕೆ ಅಥವಾ ಹಾಲಿಗೆ ‘ನೀರಾ’ ಎಂದು ಕರೆಯುತ್ತಾರೆ. ತೆಗೆದ ಕೆಲವೇ ನಿಮಿಷಗಳಲ್ಲಿ ಈ ‘ನೀರಾ’ ಹುಳಿ ಬಂದು ಜನರಿಗೆ ಅಮಲೇರಿಸಿ ಹುಚ್ಚೆಬ್ಬಿಸುತ್ತದೆ. ಮಹಾತ್ಮಾ ಗಾಂಧೀಜಿಯವರು ಮಧ್ಯಪಾನವನ್ನು ಒಂದು ಘೋರ ಖಾಯಿಲೆ ಎಂಬುದಾಗಿ ಕರೆಯುತ್ತಾರೆ. ಆದರೆ ವೈದ್ಯಕೀಯ ಉದ್ದೇಶಕ್ಕೆ ಮದ್ಯ ಬಳಸುವುದನ್ನು ಗಾಂಧೀಜಿಯವರು ಆಕ್ಷೇಪಿಸುವುದಿಲ್ಲ. ಕುಡಿತದ ಬಗ್ಗೆ ಗಾಂಧೀಜಿಯವರು ಹೀಗೆ ಹೇಳಿದ್ದಾರೆ, “ಕುಡಿತ ಎನ್ನುವುದು ದುರಾಚಾರ ಎನ್ನುವುದಕ್ಕಿಂತಲೂ ಹೆಚ್ಚಾಗಿ ಅದನ್ನು ಕಾಯಿಲೆ ಎಂದು ಕರೆಯಬಹುದು. ಬಹಳ ಮಂದಿ ಸಾಧ್ಯವಾಗುವುದಾದರೆ ಸಂತೋಷದಿಂದ ಕುಡಿತವನ್ನು ಬಿಟ್ಟುಬಿಡುವರು ಎಂದು ನನಗೆ ಗೊತ್ತಿದೆ. ಪ್ರಲೋಭನೆಗೆ ಒಳಗಾಗಿರುವ ಕೆಲವರು ಅದನ್ನು ದೂರವಿರಿಸಬಹುದು ಎಂದು ನನಗೆ ಗೊತ್ತಿದೆ. ನಿರ್ದಿಷ್ಟ ಪ್ರಸಂಗದಲ್ಲಿ ಆ ಪ್ರಲೋಭನೆಯನ್ನು ದೂರವಿರಿಸುವವರು  ಕಳ್ಳತನದಲ್ಲಿ ಕುಡಿಯುತ್ತಾರೆ ಎಂದು ನನಗೆ ಗೊತ್ತಿದೆ. ಆದ್ದರಿಂದ ಪ್ರಲೋಭನೆಯನ್ನು ಕಿತ್ತು ಹಾಕುವುದು ತಪ್ಪು ಎಂದು ನಾನು ಭಾವಿಸುವುದಿಲ್ಲ. ಕಾಯಿಲೆಯಾಗಿರುವ ವ್ಯಕ್ತಿಗಳು ಅವರಷ್ಟಕ್ಕೆ ಅವರೇ ಸಹಾಯ ಮಾಡಿಕೊಳ್ಳಬೇಕು”.( ಯಂಗ ಇಂಡಿಯಾ – ೧೨-೧-೧೯೨೮) ಗಾಂಧೀಜಿಯವರು “ನಾನು ನನ್ನನ್ನು ಶ್ರಮಿಕರ ಜತೆಯಲ್ಲಿ ಗುರುತಿಸಿಕೊಂಡಿರುವುದರಿಂದ ಕುಡಿತದ ಚಟಕ್ಕೆ ಅಂಟಿಕೊಂಡಿರುವ ಶ್ರಮಿಕರ ಮನೆಗಳಿಗೆ ಕುಡಿತವು ಎಂತಹ ಹಾನಿಯನ್ನುಂಟು ಮಾಡಿದೆ ಎಂದು ನನಗೆ ಗೊತ್ತಿದೆ. ಅವರಿಗೆ ಸುಲಭವಾಗಿ ದೊರೆಯುವಂತಿಲ್ಲದಿದ್ದರೆ ಅವರು ಮಧ್ಯವನ್ನು ಮುಟ್ಟುವುದಿಲ್ಲ ಎಂದು ನನಗೆ ಗೊತ್ತಿದೆ. ಅನೇಕ ಪ್ರಸಂಗಗಳಲ್ಲಿ ಕುಡುಕರೇ ಸ್ವತಃ ಪಾನನಿರೋಧಕ್ಕೆ ಕೋರಿಕೆ ಸಲ್ಲಿಸಿದ್ದಾರೆ ಎಂಬುದಕ್ಕೆ ನಮ್ಮ ಬಳಿ ಸಮಕಾಲೀನ ಸಾಕ್ಷ್ಯಗಳಿವೆ” (ಹರಿಜನ ಪತ್ರಿಕೆ -೩-೬-೧೯೩೯)  ಎಂದು ಹೇಳಿದ್ದಾರೆ. “ಆರ್ಥಿಕ ನಷ್ಟಕ್ಕಿಂತ ಯಾವಾಗಲೂ ನೈತಿಕ ನಷ್ಟ ಹೆಚ್ಚಿನದು” ಎಂಬುದು ಗಾಂಧೀಜಿಯವರ ವಾದ. ಏಕೆಂದರೆ ಅವರು ಹೀಗೆ “ಕುಡಿತದ ಚಟವು ಮನುಷ್ಯನ ಆತ್ಮವನ್ನು ಹಾಳು ಮಾಡುತ್ತದೆ ಮತ್ತು ಅವನನ್ನು ಮೃಗವಾಗಿ ಪರಿವರ್ತಿಸುತ್ತದೆ. ಹೆಂಡತಿ, ತಾಯಿ ಮತ್ತು ಸಹೋದರಿಯ ನಡುವಣ ಬೇಧವನ್ನು ಗ್ರಹಿಸಿಕೊಳ್ಳಲಾರದಷ್ಟು ಅಸಮರ್ಥವಾಗುತ್ತಾನೆ. ಮಧ್ಯದ ಪ್ರಭಾವದಡಿಯಲ್ಲಿ ಈ ಬೇಧವನ್ನು ಮರೆಯುವವರನ್ನು ನಾನು ಕಂಡಿದ್ದೇನೆ. ಮತ್ತು ಅಮಲೇರದೆ ಶಾಂತಚಿತ್ತನಾಗಿರುವ ಸಮಯದಲ್ಲಿ ತನ್ನ ಹೀನ ಕೃತ್ಯಗಳಿಗೆ ನಾಚಿಕೆಪಟ್ಟುಕೊಳ್ಳುತ್ತಾನೆ. ಆದುದರಿಂದ ಕುಡಿತ ಅತ್ಯಂತ ನೀಚತನದ ಕೆಲಸ” (ಹರಿಜನ ಪತ್ರಿಕೆ- ೯-೩-೧೯೩೪) ಎಂದಿದ್ದಾರೆ. ಕುಡುಕರ ಪತ್ನಿಯರ ಬಗ್ಗೆ ಗಾಂಧೀಜಿಯವರು ಕನಿಕರ ವ್ಯಕ್ತಪಡಿಸುತ್ತಾರೆ. ಅವರು ಕೊಡುವ ಎರಡು ಉದಾಹರಣೆಗಳು ಕುಡಿತದ ದುಷ್ಪರಿಣಾಮಗಳನ್ನು ತಿಳಿಸುತ್ತದೆ. ಹಡುಗುಗಳ ಕ್ಯಾಪ್ಟನ್ಗಳು ಪಾನಮತ್ತರಾಗಿದ್ದಲ್ಲಿ. ಅವರಿಗೆ ಯಾವ ರೀತಿಯಿಂದಲೂ ಹಡಗನ್ನು ನಿಯಂತ್ರಿಸಲು ಸಾಧ್ಯವಾಗದು. ಅವರ ಕುಡಿತದ ಅಮಲು ಇಳಿದು ಅವರು ಯಥಾಸ್ಥಿತಿಗೆ ಬಂದ ನಂತರ ಮಾತ್ರ ಸಾಧ್ಯವಾಗಬಹುದು. ಅದೇ ರೀತಿ ಓರ್ವ ವಕೀಲ ಪಾನಮತ್ತನಾಗಿ ನಡೆಯಲಾಗದೆ ಚರಂಡಿಯಲ್ಲಿ ಉರುಳಿ ಬಿದ್ದಲ್ಲಿ ಪೋಲಿಸರು ಆತನನ್ನು ಹೊತ್ತೊಯ್ದು ಆತನ ಮನೆ ತಲುಪಿಸಬೇಕಾಗಬಹುದು. “ಕುಡಿತದಿಂದ ಸರ್ವನಾಶ” ಕುಡಿತವು ಆತನ ಸಂಸಾರದ ಮತ್ತು ಸಮಾಜದ ಸ್ವಾಸ್ಥವನ್ನು ಕೆಡಿಸುತ್ತದೆ. ಗಾಂಧೀಜಿಯವರು ಹೀಗೆ “ಕುಡಿತ ಮತ್ತು ಮಾದಕವಸ್ತುವಿನ ಚಟದ ಕೆಡಕು ಅನೇಕ ರೀತಿಗಳಲ್ಲಿ ಮಲೇರಿಯಾ ಮತ್ತು ಅದರಂತಹ ಕಾಯಿಲೆಗಳಿಂದ ಉಂಟಾಗುವ ಕೆಡುಕಿಗಿಂತಲೂ ಅಪಾರವಾಗಿ ಹಾನಿಯನ್ನುಂಟು ಮಾಡುವುದಾಗಿರುತ್ತದೆ. ಏಕೆಂದರೆ ಕಡೆಯದು ದೇಹಕ್ಕೆ ಅಪಾಯವನ್ನುಂಟು ಮಾಡಿದರೆ ಕುಡಿತ ಮತ್ತು ಮಾದಕ ವಸ್ತುಗಳು ದೇಹ ಮತ್ತು ಆತ್ಮ ಜೀವ ಎರಡನ್ನು ಹಾಳು ಮಾಡುತ್ತದೆ” (ಯಂಗ್ ಇಂಡಿಯಾ – ೩-೩-೧೯೨೭)  ಎಂದಿದ್ದಾರೆ. ದೇಶ ದಿವಾಳಿಯಾದರೂ ಚಿಂತೆಯಿಲ್ಲ ನಮ್ಮ ಮಧ್ಯೆ ಸಾವಿರಾರು ಮಂದಿ ಕುಡುಕರು ಇರುವ ಸಮಾಜವನ್ನು ನೋಡಲು ನಾನು ಇಷ್ಟಪಡುವದಿಲ್ಲವೆನುತ್ತಿದ್ದರು. ಅಬಕಾರಿ ಸುಂಕದಿಂದ ಬರುವ ಆದಾಯದಿಂದ ನಾವು ಶಿಕ್ಷಣ ಕೊಡುತ್ತೇವೆಂದಾದರೆ ಅಂತಹ ಶಿಕ್ಷಣವೇ ನಮಗೆ ಬೇಡವೆನ್ನುತ್ತಿದ್ದರು. ಗಾಂಧೀಜಿಯವರು ಹೀಗೆ ಹೇಳಿದ್ದಾರೆ, “ಕುಡಿತದ ಚಟಕ್ಕೆ ಬಲಿಯಾಗಿರುವ ರಾಷ್ಟ್ರದ ಮುಖದಲ್ಲಿ ವಿನಾಶವಲ್ಲದೇ ಬೇರೆನೂ ಕಣ್ಣಿಗೆ ಹೊಳೆಯುವಂತಿರುವುದಿಲ್ಲ. ಆ ಚಟದ ಮೂಲಕ ಸಾಮ್ರಾಜ್ಯಗಳು ಹಾಳಾಗಿವೆ ಎಂದು ಇತಿಹಾಸ ದಾಖಲಿಸಿದೆ. ಶ್ರೀ ಕೃಷ್ಣ ಸೇರಿದ್ದ ಪ್ರಸಿದ್ಧ ಸಮುದಾಯವೊಂದು ಆದ್ದರಿಂದ ಪತನಗೊಂಡಿತು ಎಂದು ಭಾರತದ ಇತಿಹಾಸದಲ್ಲಿ ದಾಖಲಾಗಿದೆ. ರೋಮ್ನ ಪತನಕ್ಕೆ ನೇರವಾಗಿ   ಈ ಭಯಾನಕ ಮಧ್ಯವೇ ಕಾರಣವಾಗಿತು”್ತ.( ಯಂಗ್ ಇಂಡಿಯಾ- ೪-೪-೧೯೨೯) ಗಾಂಧೀಜಿಯವರು ಹೀಗೆ ಹೇಳಿದ್ದಾರೆ, ‘ಇಡೀ ಭಾರತಕ್ಕೆ ನನ್ನನ್ನು ಒಂದು ಗಂಟೆ ಕಾಲ ಸರ್ವಾಧಿಕಾರಿಯೆಂದು ನೇಮಿಸಿದರೆ ನಾನು ಮಾಡಲಿರುವ ಮೊದಲ ಕೆಲಸವೆಂದರೆ ಪರಿಹಾರ ನೀಡದೇ ಎಲ್ಲ ಮಧ್ಯದಂಗಡಿಗಳನ್ನು ಮುಚ್ಚಿಸುವುದು ಮತ್ತು ಖಾರಕಾನೆ ಮಾಲೀಕರುಗಳಿಗೆ ಅವರ ಕೆಲಸಗಾರರುಗಳಿಗೆ ಮಾನವೀಯ ಸೌಲಭ್ಯಗಳನ್ನು ಒದಗಿಸಲು ಬಲವಂತಪಡಿಸುವುದು ಮತ್ತು ಈ ಶ್ರಮಿಕರುಗಳು ಪರಿಶುದ್ಧ ಪಾನೀಯಗಳನ್ನು ಮತ್ತು ಮನರಂಜನೆಗಳನ್ನು ಪಡೆಯುವಂತಹ ಆಹಾರ ಪಾನೀಯಗಳ ಮತ್ತು ಮನರಂಜನಾ ರೂಮುಗಳನ್ನು ತೆರೆಯುವಂತೆ ಸೂಚನೆ/ಸಲಹೆ ನೀಡುತ್ತಾರೆ’ .(ಯಂಗ್ ಇಂಡಿಯಾ-೨೫-೬-೧೯೩೧) ರಷ್ಯಾ ದೇಶದ ಲಿಯೋ ಟಾಲ್ಸ್ಟಾಯ್ ಎಂಬ ಮಹಾಶಯ ತಾನೇ ಈ ಚಟಕ್ಕೆ ಚಿಕ್ಕ ವಯಸ್ಸಿನಲ್ಲಿಯೇ ಬಲಿಯಾಗಿ ನಂತರ ತ್ಯಜಿಸಿ, ಹೊಗೆಸೊಪ್ಪಿನ ಯಾವುದೇ ರೂಪದ ಸೇವನೆ ಎಲ್ಲಾ ಚಟಗಳಿ ಗಿಂತ ಅತ್ಯಂತ ದುಷ್ಟ ಚಟವೆಂದಿದ್ದನು. ಈ ಚಟ ‘ದುಶ್ಚಟಗಳ ರಾಜ’ ‘ತಂಬಾಕು ಅತ್ಯಂತ ಹೀನ ಮಾದಕ ವಸ್ತು ಎಂದು ಆ ಮಹಾನುಭಾವ ಹೇಳಿದ್ದ. ಸಾಮಾನ್ಯವಾಗಿ ಹದಿಹರೆಯದವರು ಎರಡು ರೀತಿಯ ದುಶ್ಚಟಗಳಿಗೆ ಸಿಲುಕಿಕೊಳ್ಳುತ್ತಾರೆ. ಕೆಲವರು ಸಿಗರೇಟ, ಮದ್ಯಪಾನದ ಸುಳಿಗೆ ಬಿದ್ದರೆ, ಇನ್ನೂ ಕೆಲವರು ಮಾದಕ ದ್ರವ್ಯಗಳ ದಾಸರಾಗುತ್ತಾರೆ. ಸಿಗರೇಟ, ಮದ್ಯಪಾನದ ಸುಳಿಯಲ್ಲಿ ಬಿದ್ದವರು ಚಟವನ್ನು ತುಂಬ ದಿನ ರಹಸ್ಯವಾಗಿ ಕಾಪಾಡಿಕೊಳ್ಳಲು ಸಾಧ್ಯವಿಲ್ಲ. ಸಿಗರೇಟ ಸೇದುವುದು ಒಂದು ಬೇಜವಾಬ್ದಾರಿಯುತ ವರ್ತನೆಯ ಪ್ರತೀಕ ಬಸ್ಸ್,  ರೈಲು, ಟ್ಯಾಂಗಾ, ಮನೆಯಲ್ಲಿ ಅಕ್ಕಪಕ್ಕದವರ ನಿಂದನೆಯನ್ನು ಲೆಕ್ಕಿಸದೇ ಮಾಡುವ ಒಂದು ಅನಾಗರಿಕ ವರ್ತನೆ ಹೊಗೆಸೊಪ್ಪು ಪಾತಕ ಕೃತ್ಯಗಳನ್ನು ಮಾಡಲು ಪ್ರೇರೇಪಿಸುತ್ತದೆಂದು ತಜ್ಞರು ಸಾಬೀತುಪಡಿಸಿದ್ದಾರೆ. ಸರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇದಿಸಿದ್ದರೂ. ಸಿಗರೇಟ ಸೇವನೆ ಕಡಿಮೆಯಾಗಿಲ್ಲ. ಧೂಮಪಾನ ಮಾಡುವವನು ಪ್ರಜ್ಞೆ ಇಲ್ಲದೆ ಸುತ್ತಲೂ ಹೊಗೆ ಮತ್ತು ವಾಸನೆ ಹರಡಿ ಪಕ್ಕದವರಿಗೆ ಅಸಹ್ಯ ಹುಟ್ಟಿಸುತ್ತಾನೆ. ಆದರೆ ಮಾದಕ ದ್ರವ್ಯದ  ವ್ಯಸನ ಹಾಗಲ್ಲ. ಮಕ್ಕಳು ಡ್ರಗ್ ದಾಸರಾಗಿ ಅತಿರೇಕಕ್ಕೆ ಹೋಗುವವರೆಗೂ ಪೋಷಕರಿಗೆ ತಮ್ಮ ಮಗ ಮಾದಕ ವ್ಯಸನಿ ಎಂಬ ಸಣ್ಣ ಸುಳಿವು ಕೂಡ ಸಿಕ್ಕಿರುವುದಿಲ್ಲ. ಸೈಲೆಂಟ ಕಿಲ್ಲರ್ನಂತೆ ತನ್ನ ಚಟಕ್ಕೆ ಬಿದ್ದವರನ್ನು ಅಪೋಶನ ತೆಗೆದುಕೊಂಡಿರುತ್ತದೆ. ಹಾಗಾಗಿ ಯುವಸಮುದಾಯದ ಪಾಲಿಗೆ ಮಾದಕದ್ರವ್ಯ ಯಾವತ್ತಿಗೂ ಅತಿಘೋರ ಶಾಪವಿದ್ದಂತೆ. ವಾಸ್ತವವಾಗಿ ಮದ್ದು ಎಂದರೇನು? ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಯಾವುದೇ ಪದಾರ್ಥವನ್ನು ಜೀವಿಯೊಂದು ಸೇವಿಸಿದಾಗ ಅದರ ಸ್ವಾಭಾವಿಕ ಕ್ರಿಯೆಗಳಲ್ಲಿ ವ್ಯತ್ಯಾಸ ಉಂಟುಮಾಡುವ ಸಾಮರ್ಥ್ಯ ಹೊಂದಿದ್ದರೆ. ಅದನ್ನು ಮದ್ದು ಎಂದು ಕರೆಯಲಾಗುತ್ತದೆ. ‘ನಾರ್ಕೋಟಿಕ್ ಡ್ರಗ್ಸ್’ ಇಂದು ಬಹಳಷ್ಟು ಚರ್ಚೆಗೆ ಗ್ರಾಸವಾಗುತ್ತಿರುವ ವಿಷಯವಾಗುತ್ತಿವೆ. ಸುಂಕದ ಇಲಾಖೆಯವರು ವಿಮಾನ ನಿಲ್ದಾಣಗಳಲ್ಲಿ ಅವುಗಳನ್ನು ವಶಪಡಿಸಿಕೊಂಡ ಸುದ್ಧಿ ಸಮಾಚಾರಗಳನ್ನು ಪತ್ರಿಕೆಗಳಲ್ಲಿ ಆಗಾಗ್ಗೆ ಓದುತ್ತೇವೆ. ಹೆಚ್ಚೆÀಚ್ಚ್ಚು ಯುವಜನರು ಅದರ ಕಪಿಮುಷ್ಟಿಗೆ ಸಿಕ್ಕಿಹಾಕಿಕೊಳ್ಳುತ್ತಾರೆ. ಮದ್ದುಗಳ ಕಳ್ಳ ಸಾಗಾಣಿಕೆ ಮತ್ತು ಅವುಗಳ ದುರ್ಬಳಕೆಯ ಅವಳಿ ಸಮಸ್ಯೆ ಇಂದು ನಮ್ಮೆದುರಿಗೆ ಬೃಹದಾಕಾರವಾಗಿ ತಲೆಯೆತ್ತಿ ನಿಂತಿದೆ. ಭೌಗೋಳಿಕವಾಗಿ ನಮ್ಮ ದೇಶ ಮದ್ದುಗಳನ್ನು ಕದ್ದು ಸರಬರಾಜು ಮಾಡುವ ಎರಡು ಪ್ರಮುಖ ವಲಯಗಳ ನಡುವೆ ನೆಲೆಯಾಗಿರುವುದು ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸಿದೆ, ಆಗ್ನೇಯ ಏಷ್ಯಾದ ರಾಷ್ಟ್ತಗಳಾದ ಬರ್ಮಾ, ಥೈಲ್ಯಾಂಡ, ಮತ್ತು ಲಾವೋಸ್ (ಸುವರ್ಣ ತ್ರಿಕೋಣ) ಮತ್ತು ಸನಿಹದ ಮದ್ಯಪೂರ್ವ ದೇಶಗಳಾದ ಪಾಕಿಸ್ತಾನ, ಅಪಘಾನಿಸ್ಥಾನ ಮತ್ತು ಇರಾನ್ (ಬಂಗಾರದ ಅರ್ಧಚಂದ್ರ) ಕೇಂದ್ರ ಕಾರ್ಯಸ್ಥಾನಗಳಾಗಿದ್ದು ಭಾರತ ಅವುಗಳ ನಡುವೆ ಸ್ಯಾಂಡವಿಜ್ ನಂತೆ ಸೇರಿಕೊಂಡಿವೆ. ಹೀಗಾಗಿ ಭಾರತ ಮದಕ ವಸ್ತುಗಳ ಕಳ್ಳ ಸಾಗಾಣಿಕೆಯ ಪ್ರಮುಖ ಹೆದ್ದಾರಿಯಾಗಿ ಪರಿವರ್ತನೆಗೊಂಡಿದೆ. ಜೊತೆಗೆ ಮರಿಜುವಾನ ಮತ್ತು ಹಶೀಶಗಳನ್ನು ವಿಶ್ವದ ಮಾರುಕಟ್ಟೆಗಳಿಗೆ ಸರಬರಾಜು ಮಾಡುವ ನೇಪಾಳ ನಮ್ಮ ಉತ್ತರಕ್ಕಿದೆ. ಸದ್ಯ ಬಾಲಿವುಡ್ ನಟ ಸುಶಾಂತಸಿಂಗ್  ಆತ್ಮಹತ್ಯೆಯ ಹಿನ್ನೆಲೆಯಲ್ಲಿ ಮದ್ದಿನ ವಿರಾಟ್ ಸ್ವರೂಪ ಬಯಲಾಗಿಬಿಟ್ಟಿದೆ. ಎನ್ಸಿಬಿ ಅಧಿಕಾರಿಗಳು ರಾಜ್ಯದ  ಡ್ರಗ್ಸ್  ದಂಧೆಯಲ್ಲಿ, ಬಾಲಿವುಡ್, ಹಾಗೂ ಕನ್ನಡ ಚಿತ್ರರಂಗದ ನಟ-ನಟಿಯರು ನಂಟು ಬೆಸೆದುಕೊಂಡಿರುವುದನ್ನು ಪತ್ತೆ ಮಾಡಿದ್ದಾರೆ. ಇದು ಪ್ರಕರಣಕ್ಕೆ ಇನ್ನಷ್ಟು ರೋಚಕತೆ ತಂದುಕೊಟ್ಟಿದೆ. ಜೊತೆಗೆ ರಾಜಕೀಯ ಕೆಸರೆರಚಾಟಕ್ಕೂ ಈ ಪ್ರಕರಣ ಹಾದಿ ಮಾಡಿಕೊಟ್ಟಿದೆ. ರಾಜಕೀಯ ಆರೋಪ ಪ್ರತ್ಯಾರೋಪಗಳಿಂದ ಡ್ರಗ್ ವಿರುದ್ಧದ ಹೋರಾಟ ಹಾದಿ ತಪ್ಪುತ್ತಿದೆ. ಈಗ ರಾಜಕೀಯ ಮಾಡುತ್ತಾ ಕುಳಿತುಕೊಳ್ಳುವ ಬದಲು ಅತ್ಯಂತ ಕೆಟ್ಟ ಪಿಡುಗಾಗಿರುವ ಈ ದಂದೆಯನ್ನು ಮಟ್ಟಹಾಕುವ ಬಗ್ಗೆ ಆರೋಗ್ಯಕರವಾಗಿ ಚಿಂತಿಸುವ ಕಾಲ ಸನ್ನಿಹಿತನಾಗಿದೆ. ಇಂದು

ಮದ್ಯಪಾನ ಮತ್ತು ಮಾದಕ ದ್ರವ್ಯಗಳ ನಿಷೇಧ Read Post »

ಕಾವ್ಯಯಾನ

ನೆನಪುಗಳು:

ಕವಿತೆ ನೆನಪುಗಳು: ಡಾ. ಅರಕಲಗೂಡು ನೀಲಕಂಠ ಮೂರ್ತಿ 1.ನೆನಪುಗಳೇ ಹಾಗೆ —ಒಮ್ಮೆ ಚುಚ್ಚುಸೂಜಿಗಳುಒಮ್ಮೆ ಚಕ್ಕಳಗುಳಿ ಬೆರಳುಗಳುಮತ್ತೊಮ್ಮೆ ಮುಗುಳುನಗೆಯ ಜೋಕುಗಳುಇನ್ನೊಮ್ಮೆ ಕಣ್ಣ ಬಸಿಯುವ ಹಳೆಯ ಹೊಗೆಯ ಅಲೆಗಳು…ಮತ್ತುಪಿಸುಮಾತಲಿ ಮುಲುಗುವಒಲವಿನ ಬಿಸಿ ಬಂಧುರ ಬಂಧನಗಳು…! 2.ನೆನಪುಗಳು —ಪ್ರಪ್ರಥಮ ಮಳೆಗೆ ವಟಗುಟ್ಟುವಕೊರಕಲ ಕಪ್ಪೆಗಳು;ಹರೆಯದ ಹುತ್ತದಲಿ ಭುಸುಗುಟ್ಟುಮತ್ತೆಲ್ಲೋ ಹರಿದು ಮರೆಯಾದಹಾವಿನ ಪೊರೆಗಳು…!ನೆನಪುಗಳು ಏಕಾಂತದಲಿ ಕಳಚುತ್ತವೆದಿರಿಸು ಒಂದೊಂದಾಗಿ,ಎಂದೋ ಹಂಬಲಿಸಿದ ಬಿಸಿಯಬೆಂಕಿಯಾಗಿ… 3.ನೆನಪುಗಳು —ಕಳೆದುಹೋದ ಕೋಲ್ಮಿಂಚಿನ ಹಸಿರ ಚಿಗುರುಈ ಋತು ಒಣಗಿ ಉದುರುವ ತರಗು…ಸಗಣಿ ಗೋಡೆಗೆಸೆವುದು ಬೆರಣಿಗಾಗಿ,ಆ ಬೆರಣಿಯುರಿದು ಬೆಂಕಿ…ಅಷ್ಟೆ! ಎಂಥ ಸುಕೃತವೋ ಏನೋ —ನೆನಪಿನ ಆಯಸ್ಸು ನಮ್ಮಷ್ಟೆಅಥವಾ…ಇನ್ನೂ ಕಮ್ಮಿ…! ****************************

ನೆನಪುಗಳು: Read Post »

ಇತರೆ

ಚಪ್ಪರದ ಗಳಿಕೆ

ಅನುಭವ ಚಪ್ಪರದ ಗಳಿಕೆ ಶಾಂತಿವಾಸು ನಮ್ಮ ಮನೆಗೆ ಹೊದ್ದಿಸಿದ ಸಿಮೆಂಟ್ ಶೀಟ್ ಮೇಲೆ ಹತ್ತಿ ನಡೆಯಲಾರಂಭಿಸಿದರೆ ಸುಮಾರು ಇಪ್ಪತ್ತು ಮನೆಗಳನ್ನು ದಾಟಬಹುದಿತ್ತು.  ನಲವತ್ತು ವರ್ಷಗಳ ಮೊದಲು ನಮ್ಮ ರಸ್ತೆಯಲ್ಲಿ ಯಾವುದೇ ಮಹಡಿ ಮನೆ ಇರಲಿಲ್ಲ. ನೆರಳಿಗಾಗಿ ನಮ್ಮ ಮನೆಯ ಹೊಸ್ತಿಲಿನ ನಂತರ ಹತ್ತು ಅಡಿಗಳಷ್ಟು ಮುಂದಕ್ಕೆ, ಮೇಲೆ ಕವಲುಹೊಡೆದ ಉದ್ದದ ಊರುಗೋಲುಗಳನ್ನು ನಿಲ್ಲಿಸಿ ಮೇಲೆ ಚೌಕಟ್ಟು ಮಾಡಿ  ಇಪ್ಪತ್ತು ಅಡಿಗಳಷ್ಟು ಅಗಲಕ್ಕೆ ತೆಂಗಿನ ಗರಿಗಳನ್ನು ಹೊದಿಸಿದ್ದರು. ನಮ್ಮ ಮನೆ ಬಿಟ್ಟು ಎಡಗಡೆಗೆ ಬಾಡಿಗೆ ಮನೆಗಳು ಹಾಗೂ ಬಲಗಡೆಗೆ ಗಿಡಮರಗಳು (ಮಾವು ಹಾಗೂ ಸೀಬೆ), ಬಟ್ಟೆ ಒಗೆಯುವ ಕಲ್ಲು ಹಾಗೂ ಬಾಡಿಗೆ ಮನೆಯವರಿಗಾಗಿ ಒಂದು ನೀರಿನ ತೊಟ್ಟಿ ಇದ್ದಿತು.  ಬೆಳಗ್ಗೆ ಸಂಜೆ ಕಾಫೀ ಕುಡಿಯಲು ಚಪ್ಪರದ ನೆರಳು ಒಳ್ಳೆಯ ಜಾಗವಾಗಿತ್ತು.    ನಮ್ಮ ಮನೆಯಲ್ಲಿ ಮೊದಲೇ ಬಾಡಿಗೆಗಿದ್ದ ತಮ್ಮನ ಸಂಸಾರದೊಡನೆ ಸೇರಿಕೊಳ್ಳಲು ಆಂಧ್ರದ ಒಂದು ಹಳ್ಳಿಯಿಂದ ಇಪ್ಪತ್ತು ವರ್ಷ ವಯಸ್ಸಿನ ಮಗನೊಡನೆ ಬಂದ ಕುಂಟಮ್ಮನಿಗೆ (ಶಾಂತಮ್ಮ ಇವರ ಹೆಸರು) ಒಂದು ಕಾಲು ಚಿಕ್ಕದಾದ್ದರಿಂದ ಕುಂಟುತ್ತಾ ಸ್ವಲ್ಪ ದೂರವೂ ನಡೆಯಲಾಗುತ್ತಿರಲಿಲ್ಲ. ಅಲ್ಲದೆ ಒಂದೇ ಕಡೆ ಗಂಟೆಗಟ್ಟಲೆ ಕುಳಿತಿರುತ್ತಿದ್ದರಿಂದ ತುಂಬಾ ದಪ್ಪಗಾಗಿದ್ದರಲ್ಲದೆ   ಸೋರುವಂತೆ ತಲೆಗೆ ಹಚ್ಚುತ್ತಿದ್ದ ಎಣ್ಣೆ, ಕಪ್ಪಾಗಿದ್ದ ಮುಖವನ್ನು ಫಳಫಳನೆ ಹೊಳೆಯುವಂತೆ ಮಾಡಿತ್ತು. ವಿಧವೆಯಾದ್ದರಿಂದ ಕುಂಕುಮವಿರದ ಬೋಳು ಹಣೆ, ಕೈಗಳಿಗೊಂದೊಂದು ಮಾಸಿದ ಹಿತ್ತಾಳೆಯ ಬಳೆ, ಕಿವಿಗಳಿಗೆ  ತೆಳುವಾದ ಪುಟ್ಟ ಚಿನ್ನದ ಓಲೆ, ಏಳುಕಲ್ಲಿನ ಮೂಗುತ್ತಿ ಧರಿಸಿದ್ದಾಕೆಗೆ ಬೇರೆ ಒಡವೆಗಳಿರಲಿಲ್ಲ.  ಬೆಳಗ್ಗೆ ಎಂಟು ಗಂಟೆಗೆಲ್ಲಾ ಚಪ್ಪರದ ಕೆಳಗೆ ಕುಳಿತು ಮುತ್ತುಗದ ಎಲೆಗಳನ್ನು ಒಪ್ಪ ಮಾಡಿ, ಊಟದ ಎಲೆಗಳನ್ನು ಕಡ್ಡಿಗಳಿಂದ ಹೊಲಿಯುತ್ತಿದ್ದರು. ಮಗ ಎಲೆಗಳು ಹಾಗೂ ಅವನ್ನು ಹೊಲಿಯಲು ಕಡ್ಡಿಗಳನ್ನು ತಂದು ಕೊಟ್ಟು ಹೊಲಿದ ಎಲೆಗಳನ್ನು ತೆಗೆದುಕೊಂಡು ಹೋಗಿ ಅಂಗಡಿಗಳಿಗೆ  ಮಾರಿ ಬರುತ್ತಿದ್ದ. ಅದರಲ್ಲಿಯೇ ಅಮ್ಮ ಮಗನ ಜೀವನ  ನಡೆಯುತ್ತಿತ್ತು. ಅಲ್ಲದೆ ಮತ್ತೊಂದು ಜೊತೆ  ಬಿಳಿಕಲ್ಲಿನ ದೊಡ್ಡ ಓಲೆ ಕೊಳ್ಳುವ ಉದ್ದೇಶದಿಂದ ಕಷ್ಟಪಟ್ಟು ಹಣ ಕೂಡಿಡುತ್ತಿದ್ದರು. ನಾವು ಯಾರೇ ಮನೆಯಲ್ಲಿರಲಿ ಬಿಡಲಿ ಕುಂಟಮ್ಮ ಮಾತ್ರ ತಮ್ಮ ವಸ್ತುಗಳೊಡನೆ ನಿಶ್ಚಿತ ಸ್ಥಳದಲ್ಲಿ ಇದ್ದೇ ಇರುತ್ತಿದ್ದರು. ಆರು ಗಂಟೆಯ ನಂತರ ಅವರ ಎಲ್ಲ ವಸ್ತುಗಳನ್ನು ಸುಣ್ಣಬಳಿದ ಗೋಡೆಗೊತ್ತಿ ಬಿಟ್ಟು ಹೋಗುತ್ತಿದ್ದರು. ನಮ್ಮ ಮನೆಗೆ ಬರುವವರಾಗಲಿ ಅಥವಾ ಅವರ ಮನೆಗೆ ಬರುವವರಾಗಲಿ ಚಪ್ಪರದ ಕೆಳಗೆ ಕುಳಿತುಕೊಳ್ಳುತ್ತಿದ್ದರು. ಗಂಡಸರಾದರೆ ಹಲಗೆ ಮುಚ್ಚಿದ ತೊಟ್ಟಿಯ ಮೇಲೆ ಇಬ್ಬರು ಹಾಗೂ ಕಬ್ಬಿಣದ ಮಡಚುವ ಖುರ್ಚಿಯಲ್ಲಿ ಒಬ್ಬರು ಕೂರಬಹುದಿತ್ತು. ಹೆಂಗಸರು ಮಕ್ಕಳೆಲ್ಲಾ ಸಗಣಿಯಿಂದ ಸಾರಿಸಿದ ನೆಲದ ಮೇಲೆ ಕೂರುವುದು ಸಾಮಾನ್ಯವಾಗಿತ್ತು. ಬಂದವರೊಡನೆ ಮಾತನಾಡುತ್ತಲೇ ಪ್ಲಾಸ್ಟಿಕ್ ಬುಟ್ಟಿಗಳನ್ನು ಹೆಣಿಯುತ್ತಿದ್ದ ನಮ್ಮ ತಾಯಿ, ಕೇಳಿದವರಿಗೆ ಮಾರುತ್ತಿದ್ದರು. ನಮ್ಮಮ್ಮ, ಚಪ್ಪರದಾಚೆ ಬಲಗಡೆ ಮಣ್ಣು ಅಗೆದು ಗೊಬ್ಬರ ಹಾಕಿ ಮನೆಯ ಸಿಮೆಂಟ್ ಶೀಟಿನ ಮೇಲೆ ಬರುವಂತೆ ಸಿಹಿಗುಂಬಳ, ಬೂದುಗುಂಬಳ, ಪಡವಲ, ಹೀರೆ, ತುಪ್ಪೀರೆಕಾಯಿಗಳನ್ನು (ಇವ್ಯಾವುದನ್ನೂ ನಮ್ಮ ಮನೆಯಲ್ಲಿ ಯಾರೂ ತಿನ್ನುತ್ತಿರಲಿಲ್ಲ) ಹಾಗೂ ಚಪ್ಪರದ ಮೇಲೆ ಹವಾಮಾನಕ್ಕೆ ತಕ್ಕಂತೆ ಚಪ್ಪರದ ಅವರೆ ಅಥವಾ ಹಾಗಲಕಾಯಿ ಹಾಗೂ ಮನೆಯ ಮುಂದಿನ ಮಣ್ಣಿನ ಜಾಗದಲ್ಲಿ ಹಲವು ಬಗೆಯ ಹೂವುಗಳು, ಟೊಮ್ಯಾಟೋ, ಬೆಂಡೆಕಾಯಿಗಳನ್ನು ಬೆಳೆದು, ಅಗತ್ಯವಿರುವಷ್ಟನ್ನು ಉಪಯೋಗಿಸಿ ಮಿಕ್ಕಿದ್ದನ್ನು ಮಾರುತ್ತಿದ್ದರು. ಇವುಗಳಿಂದ ಬರುವ ವರಮಾನ ನಮ್ಮಮ್ಮನದು. ಮಧ್ಯಾನ್ಹದವರೆಗೂ ಕೆಲಸ, ಊಟ ಮುಗಿಸಿ ಬರುವ ಅಕ್ಕಪಕ್ಕದ ಮನೆಯ ನಮ್ಮಮ್ಮನ ಗೆಳತಿಯರು ಶಾಂತಮ್ಮನ ಊಟದೆಲೆ ಹಾಗೂ ನಮ್ಮಮ್ಮನ ಬುಟ್ಟಿ, ಹೂವು ಹಾಗೂ ತರಕಾರಿಗಳ                      ಗ್ರಾಹಕರುಗಳಾಗಿದ್ದರು. ನಮ್ಮ ತಾತ ಸ್ವಂತದ ಸೌದೆ ಡಿಪ್ಪೋ ಹೊಂದಿದ್ದರು. ವಯಸ್ಸಾದ ನಂತರ ಅದನ್ನು ಮಾರಿ ಮನೆಯಲ್ಲಿಯೇ ಇರುತ್ತಿದ್ದರು. ಮೂರು ಜನರು ಕೂರಬಹುದಾದ ಮರದ ಬೆಂಚೊಂದನ್ನು ಬೆಳಗ್ಗಾದರೆ ಮನೆಯೊಳಗಿನಿಂದ ಚಪ್ಪರದ ಕೆಳಗೆ ಹಾಕಿಸಿಕೊಂಡು ಕೂರುತ್ತಿದ್ದರು, ಸೊಂಟ ನೋಯುವಾಗ ಮಲಗುತ್ತಿದ್ದರು. ಹಲವಾರು ಮನೆಯ ಪಂಚಾಯಿತಿಗಳು, ಮದುವೆಯ ಮಾತುಕತೆ, ಪಂಚಾಂಗ(ತೆಲುಗು) ನೋಡಿ ಮದುವೆ ದಿನ ಗೊತ್ತು ಮಾಡುವುದೆಲ್ಲವೂ ಈ ಚಪ್ಪರದ ಕೆಳಗೇ ನಮ್ಮ ತಾತನ ಮೇಲುಸ್ತುವಾರಿಯಲ್ಲಿ ನಡೆಯುತ್ತಿತ್ತು. ತಾತನನ್ನು ನೋಡಲು ಬರುವವರು ಕಡಲೆಕಾಯಿ, ಗೆಣಸು, ತೆಂಗಿನಕಾಯಿಗಳನ್ನು ತಂದುಕೊಡುತ್ತಿದ್ದರು.   ನಮ್ಮ ತಂದೆ ಆಂಧ್ರದ ಕಡೆಯವರು, ತಾಯಿ ತಮಿಳುನಾಡಿನ ತೆಲುಗು ಭಾಷಿಕರು. ಹೀಗಾಗಿ ಎರಡೂ ಕಡೆಯ ನೆಂಟರಿಂದ ಸದಾ ತುಂಬಿರುತ್ತಿದ್ದ ಮನೆ ನಮ್ಮದು. ಬಂದವರು ಎರಡು ಮೂರು ದಿನ ತಂಗಿ ವಾಪಸ್ಸು ಹೊರಟರೆ, ಈ ಚಪ್ಪರದ ಕೆಳಗೆ ಒಲೆ ಬಾಣಲೆ ಇಟ್ಟು, ಚೆಕ್ಕುಲಿ ಇಲ್ಲದಿದ್ದರೆ ಕರ್ಜಿಕಾಯಿ ಮಾಡಿ ಊರಿಗೆ ಕೊಟ್ಟುಕಳಿಸುವ ದೃಶ್ಯ ಆಗಾಗ ನೆನನಾಗುತ್ತದೆ. ಯಾಕೆಂದರೆ ಅಪ್ಪಿತಪ್ಪಿ ಹುಷಾರಿಲ್ಲದೆಯೋ ಅಥವಾ ಸಮಯ ಒದಗಿ ಬರದೆ ಕುರುಕಲು ಮಾಡಿಕೊಡಲಿಲ್ಲವೆಂದರೆ  ಮುಖ ತಿರುವಿ ಹೋದ ನೆಂಟರನ್ನು ಮರೆಯಲಾದೀತೇ??  ದೀಪಾವಳಿ ಹಬ್ಬದ ಹಿಂದಿನ ದಿನ ನಮ್ಮ ಸೋದರಮಾವಂದಿರು ಬಂದು, ಇದೇ ಚಪ್ಪರದ ಕೆಳಗೆ ಕಲ್ಲುಗಳನ್ನು ಪೇರಿಸಿ,  ತಲೆಯಮೇಲೆ ಗರಿಕೆ ಹುಲ್ಲು ಸಿಕ್ಕಿಸಿದ ಸಗಣಿಯ ಗಣಪನನ್ನು ಪ್ರತಿಷ್ಠಾಪಿಸಿ, ಪೂಜೆ ಮಾಡಿ, ಒಲೆ ಹಚ್ಚಿ, ಸುತ್ತ ಕುಳಿತು ರಾಶಿರಾಶಿ ಕಜ್ಜಾಯ ಮಾಡುತ್ತಿದ್ದ ಸಂಭ್ರಮವನ್ನು ಎಲ್ಲರೂ ನೆನಪಿಸಿಕೊಳ್ಳುವುದುಂಟು.    ನಮ್ಮಲ್ಲಿಯ ಹೆಣ್ಣು ಮಕ್ಕಳು ದಾಟದ ಹತ್ತನೇ ತರಗತಿಯನ್ನು ನಮ್ಮಕ್ಕ ಪಾಸು ಮಾಡಿಬಿಟ್ಟಿದ್ದರು. ನಮ್ಮಪ್ಪ ಹಾಗೂ ತಾತನ ಸಂತೋಷಕ್ಕೆ ಎಲ್ಲೆಯೇ ಇರಲಿಲ್ಲ. ಸಂತೋಷ ಹಂಚಿಕೊಳ್ಳಲು ಲಾಡು ಮಾಡುವವರನ್ನು ಕರೆಸಿ, ಇನ್ನೂರು ಲಾಡುಗಳನ್ನು  (ಚಪ್ಪರದ ಕೆಳಗೆ) ಮಾಡಿಸಿ, ಮನೆಗೆ ಬಂದವರಿಗೆ, ರಸ್ತೆಯಲ್ಲಿ ಓಡಾಡುವ ಪರಿಚಯದವರಿಗೆ,  ಕೆಲವು ಮನೆಗಳಿಗೆ ನಡೆದು ಮತ್ತು ಬಸ್ಸಿನಲ್ಲಿಯೂ ಹೋಗಿ ಕೊಟ್ಟು ಬಂದರು ನಮ್ಮ ತಂದೆ. ನಮ್ಮ ಚಪ್ಪರದ ಊರುಗೊಲಿಗೆ ಬಾಡಿಗೆ ಮನೆಯ ನಾಗಮ್ಮ ತಮ್ಮ ಒಂದೂವರೆ ವರ್ಷದ ಮಗ, ರಾಜನ ಒಂದು ಕಾಲು ಕಟ್ಟಿಹಾಕಿ ಮನೆಗೆ ಹೋಗಿಬಿಡುವರು. ಅವರು ಕೆಲಸ ಮುಗಿಸಿ ಬರುವವರೆಗೂ  ಅಳುತ್ತಲೋ, ಅರಚುತ್ತಲೋ ಉಚ್ಛೆಹುಯ್ದುಕೊಂಡು ಅದರಲ್ಲಿಯೇ ಒದ್ದಾಡಿಕೊಂಡು ಅವನು ಕುಳಿತಿರುತ್ತಿದ್ದ ಕೆಲವೊಮ್ಮೆ ಅಲ್ಲಿಯೇ ನಿದ್ರಿಸಿಯೂ ಬಿಡುತ್ತಿದ್ದ. ರಜಾ ದಿನಗಳಲ್ಲಿ ನಾನು, ನನ್ನ ತಂಗಿ ಉಮಾ ಕೆಲವು ಗೆಳತಿಯರೊಡನೆ ಸೇರಿ ಚಪ್ಪರಕ್ಕೆ ಸೀರೆಗಳನ್ನು ಪರದೆಯಂತೆ ಸಿಕ್ಕಿಸಿ ಒಳಾಂಗಣವನ್ನು ವೇದಿಕೆಯನ್ನಾಗಿಸಿ, ಐದೈದು ಪೈಸೆ ವಸೂಲಿ ಮಾಡಿ ವಿಧವಿಧವಾದ ನಾಟಕಗಳನ್ನಾಡಿ, ಬಂದ ಹಣವನ್ನು ಹಂಚಿ ಕಮ್ಮರ್ಕಟ್ಟು ತಿಂದುಬಿಡುತ್ತಿದ್ದೆವು. ಇಂಥ ಬಹುಪಯೋಗಿ ಚಪ್ಪರವು ನೋಡಲು ಬಹು ಸುಂದರವಾಗಿತ್ತು. ಮೇಲೆ ಬೀಳುವ ಮುಂಜಾವಿನ ಬಿಸಿಲಿನ ತೆಳುಕಿರಣಗಳು ಚಪ್ಪರಕ್ಕೆ ಹಾಸಿದ್ದ ಗರಿಗಳ ಸಂದುಗಳಿಂದ  ಓರೆಯಾಗಿ ಬಿದ್ದು ನೆಲವನ್ನು ಒಂದು ತೆರನಾಗಿ ಅಂದಗೊಳಿಸಿದರೆ, ಬೇಸಿಗೆಯಲ್ಲಿ ನೆಲದ ಮೇಲೆ ಮೂಡುವ ದಟ್ಟ ಕಪ್ಪು ನೆರಳಿನೊಂದಿಗಿನ ಬೆಳಕು ವರ್ಣನಾತೀತವಾದದ್ದು. ಮಳೆಗಾಲದಲ್ಲಿ ಪಟಪಟನೆ ಸದ್ದು ಮಾಡಿ ನೀರು ಸೋರುತ್ತಿದ್ದ ಚಪ್ಪರವು, ಚಳಿಗಾಲದ ಬೆಳಗು ಹಾಗೂ ಸಂಜೆ ಕಣ್ಣಿಗೆ ಕಾಣದಷ್ಟು ದಟ್ಟವಾದ ಹಿಮದಿಂದ ಮುಚ್ಚಿ ಹೋಗಿರುತಿತ್ತು. ಈ ಹಿಮದ ಮದ್ಯೆ ಬುಟ್ಟಿ ಹೊತ್ತು ಬಂದ ಹೂವಿನವಳು ಮೊಳ ಹಾಕುತ್ತಿದ್ದ ಮಲ್ಲಿಗೆ ಹೂವಿನ ವಾಸನೆಯ ಅಮಲು, ನೆನೆದಾಗಲೆಲ್ಲಾ ನನ್ನನ್ನು ಸ್ವರ್ಗದಲ್ಲಿ ತೇಲಿಸುತ್ತದೆ. ಇಷ್ಟೆಲ್ಲಾ ಮೇರು ಮಹಿಮೆಯುಳ್ಳ ಚಪ್ಪರದ ಕೆಳಗೆ, ಬೆಳದಿಂಗಳ ಚಂದ್ರನು ಮೂಡಿಸಿದ ಅಂದದ ಚಿತ್ತಾರದ ಮೇಲೆ ಕುಳಿತು  ನನ್ನಮ್ಮ ಬೇಳೆ, ಒಣಮೆಣಸಿನಕಾಯಿ  ಜೊತೆಗೆ ಟೊಮ್ಯಾಟೋ, ಈರುಳ್ಳಿ, ಬೆಳ್ಳುಳ್ಳಿ, ಹುಣಸೆಹಣ್ಣು, ಉಪ್ಪು ಹಾಕಿ ಬೇಯಿಸಿ ಮಸೆದ ಸಾರು, ನೆಂಚಿಕೊಳ್ಳಲು ಒಂದು ಅಥವಾ ಎರಡು ವರ್ಷ ಹಳೆಯದಾದ ಒಣಗಿಸಿದ ಮಾವಿನಕಾಯಿಯಿಂದ ಮಾಡಿದ ಉಪ್ಪಿನಕಾಯಿ ರುಚಿಯನ್ನು ಬಾಯಿಚಪ್ಪರಿಸುತ್ತಾ ಅಕ್ಕತಂಗಿಯರೊಂದಿಗೆ ಊಟವನ್ನು ಹಂಚಿ ತಿಂದ ನನ್ನ ಭಾಗ್ಯಕ್ಕೆ ಮಿತಿಯೇ ಇಲ್ಲ… *******************************************

ಚಪ್ಪರದ ಗಳಿಕೆ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಶುಭಲಕ್ಷ್ಮಿ ಆರ್ ನಾಯಕ ಹೃದಯ ಸಿರಿವಂತಿಕೆಗೆ ಅರಮನೆ ಗುಡಿಮನೆಗಳೆಂಬ ಭೇದವುಂಟೇ ಸಖೀಗುಣ ಅವಗುಣಗಳಿಗೆ ಬಡವನು ಬಲ್ಲಿದನೆಂಬ ಅಂತರಗಳುಂಟೇ ಸಖೀ ಅವರವರ ಭಾವಗಳಲಿ ಅವರವರ ಅರಿವಿಂಗೆ ಬಂದಂತೆ ಮಾಡುತಿಹರುಸನ್ನಡತೆ ದುರ್ನಡತೆಗಳಿಗೆ ನಾನು ನೀನೆಂಬ ದೂರಗಳುಂಟೇ ಸಖೀ ಸಂಕುಚಿತ ಭಾವದಲಿ ಸ್ವಾರ್ಥದ ಬೆಂಬತ್ತಿ ತಮ್ಮ ತನಗಳ ಮರೆತಿಹರುಜೀವನದಿ ಸ್ವಾರ್ಥವೆಂಬ ಮುಸುಕಿಗೆ ಬಲಿಯಾಗಿ ಗೆದ್ದವರುಂಟೇ ಸಖೀ ಬಡವನಲಿ ಕಾಣಬಹುದಲ್ಲವೇ ನಯ ವಿನಯತುಂಬಿರುವ ವಿಶಾಲ ಹೃದಯವಅವನ ಕಷ್ಟ ತ್ಯಾಗ ಸಹನೆಗಳ ಅಸಹನೆಯಿಂದ ಮರೆಯಲುಂಟೇ ಸಖೀ ಸಂಕುಚಿತ ಸ್ವಾರ್ಥದ ಬದುಕ ಕಂಡು ಶುಭ ಳ ಕೋಮಲ ಹೃದಯ ಚೂರಾಗಿದೆಭೇದ ಭಾವ ಸ್ವಾರ್ಥ ಮೋಹಗಳಿಂದ ಮಹಲುಗಳ ಕಟ್ಟಲುಂಟೇ ಸಖೀ *****************************

ಗಝಲ್ Read Post »

ಕಾವ್ಯಯಾನ

ಮಂಜು

ಕವಿತೆ ಮಂಜು ನಳಿನ ಡಿ ಕಾಡುಮಲ್ಲಿಕಾರ್ಜುನನ ಚರಣ ಸೇರಲು ಹಾಡುಹಗಲೇ ಹಂಬಲಿಸಿ,ಬಿದ್ದ ವರುಣನ ತಿರಸ್ಕರಿಸಿ,ಮಾಟಗಾರ ಮಹಾಮಹಿಮ, ಓಜಸ್ವಿ ಓಡೋಡಿ ಹಿಡಿಯಲಾರೆ,ತಪ್ಪಾದರೂ ತಿರುಗಿ ಬರಲಾರೆ,ಕನವರಿಸಿ ಕಾಡಹಾದಿಯ ತಪ್ಪಿಸಿ,ಊರಿಗೆ ದಾರಿ ಒಪ್ಪಿಸಿ,ಗೂಬೆ ಕೂಗಿಗೆ ಕಾಗೆ ಓಡಿಸಿ,ಮುಸ್ಸಂಜೆ ಕಳೆಯಲು, ಬೆಟ್ಟದ ಬಂಡೆಗೆ ಬೆನ್ನುಹಾಸಿ,ಮರೆತು ಹೋದರೂ ಹುಡುಕಿ ತರುವ ಯಾಚಕ,ಸುಭದ್ರ ಸನಿಹದ ಇಳಿಮುಖ ಪ್ರತಿಫಲನ,ಪ್ರೇಮದ ವಕ್ರೀಭವನ,ಘಟಿಸುವವರೆಗೂ,ಮಂಜು ಅರಸಿ ಹಬ್ಬಿ ಕವಿಯುವವರೆಗೂ,ತಬ್ಬಿಬ್ಬು ಮನಸು…ಮಂಜು ನಗಲಿ,ಮಳೆ ಬರಲಿ..ನನ್ನಿರವು ನಿನ್ನಲ್ಲಿ ಸದಾ ಇರಲಿ.. ***********************************

ಮಂಜು Read Post »

ಕಾವ್ಯಯಾನ

ಓ.. ಮನಸೇ

ಕವಿತೆ ಓ.. ಮನಸೇ ವಿಭಾ ಪುರೋಹಿತ್ ಕ್ಷಣದ ಏಕಾಂತದಲಿಅಮೂರ್ತವಾಗಿನನ್ನೆದುರಲ್ಲೇಯಿರುವಿಎದೆಯಲ್ಲಿ ಗೆಜ್ಜೆ ಕಟ್ಟಿ ಥಕಥಕಕುಣಿಸಿ ಅಟ್ಟಕ್ಕೇರಿದ ಅತಿರೇಕನಿನ್ನ ನೋಡಬೇಕೆಂಬಉತ್ಕಟತೆ ಜಲಪಾತಕ್ಕೂಜೋರಾಗಿ ಜೀಕಿದೆಹಾರಿದ ಹನಿಗಳುಚಂದಿರನ ಗಲ್ಲಕ್ಕೆ ಸವರಿದ್ದೇ ತಡತಂಪಿನಲ್ಲೇ ತಾಪ ಅನುಭವಿಸಿಧಗಧಗ ಉರಿಯುತ್ತ ಉರುಳಿಅವಳ ಸ್ಪರ್ಶಕ್ಕೆ ಘರ್ಷಕ್ಕೆಆತು ಕೂತಿರುವೆಮರಿ ಭಾಷ್ಪವಾಗಿನುಡಿಯುತಿರೆ ಮಿಡಿಗಾವ್ಯ ಓ… ಮನಸೇ ಅದ್ಭುತ !ಏನೋ ಭೋರ್ಗರೆತಅದರಲ್ಲೊಂದು ಥಳುಕುಸಣ್ಣ ಸೆಳೆತ ದೇದೀಪ್ಯಮಾನಊಹಿಸಿರಲಿಲ್ಲಶಬ್ದಾತೀತ ಅನುಭೂತಿಮನಸ್ಸು ವಿಚಾರಗಳುಆಯಸ್ಸಿನ ಅಂಕೆವಯಸ್ಸಿನ ಶಂಕೆಇವೆರಡನ್ನೂ ಮೀರಿದನಳನಳಿಸುವ ತಾಜಾತನನವೊನವೋನ್ಮೇಶಎಂಥ ವಿಚಿತ್ರ !ಮನಸಿಗೆ ಪ್ರವಾಸ ಪ್ರಯಾಸಇದ್ದಂತಿಲ್ಲಥಟ್ಟಂತ ಪ್ರತ್ಯಕ್ಷಥಟ್ಟಂತ ಅಂತರ್ಧಾನಸೇರದ ದಾರಿಯೇನಲ್ಲಸೇರುವೆ ಎಂದಾದರೊಮ್ಮೆ

ಓ.. ಮನಸೇ Read Post »

ಕಾವ್ಯಯಾನ

ಎರಡು ಕವಿತೆಗಳು

ಕವಿತೆ ಧನಪಾಲ ನಾಗರಾಜಪ್ಪ ಧನ ನಿನ್ನದನಿಕೇಳರಾರೂನಿನ್ನಪಾಡುನೋಡರಾರೂನೆಲ, ಜಲಜನ, ಮನಅಂತೆಲ್ಲಾ ಯಾಕೆ‌ ಬಡಬಡಿಸುವೆ?ಧನವೇ ಇಂಧನಧನವೇ ಪ್ರಧಾನಜಮಾನ ಇದರ ದೀವಾನನಿನಗೆ ಅರ್ಥವಾಗದೆ ಧನು? ಜಾಡ್ಯ ಇಲ್ಲಿಯ ತನಕಏಡ್ಸ್ ಒಂದರ ಹೊರತುಬಹುತೇಕ ಜಾಡ್ಯಗಳಿಗೆಇಲಾಜು ಮಾಡಬಲ್ಲರುಈಗಿನ ವೈದ್ಯರುಶ್ಲಾಘನೀಯ ಸಾಧನೆಯೇ ಸರಿ ಜಾತಿಯ ಅಹಂ ಕೂಡಾಮಾರಕ ಜಾಡ್ಯ ಅಲ್ಲವೆ?ದೂರವಿರಿ ಇದು ಸಾಂಕ್ರಾಮಿಕಮುಂದೆ ಎಂದಾದರೂಏಡ್ಸಿಗೂ ಸಹಔಷಧ ಕಂಡುಹಿಡಿಯಬಹುದೇನೋ!ಆದರೆ ಜಾತಿಯ ಜಾಡ್ಯಕ್ಕೆಮದ್ದು ಅದೆಂದು ಸಿಗುವುದೋ ಧನು? ***************************************

ಎರಡು ಕವಿತೆಗಳು Read Post »

ಕಾವ್ಯಯಾನ

ಸತ್ಯಕ್ಕೆ ಸಾಕ್ಷಿ ಬೇಕಾಗಿದೆ

ಕವಿತೆ ಸತ್ಯಕ್ಕೆ ಸಾಕ್ಷಿ ಬೇಕಾಗಿದೆ ಆರ್.ಉಷಾ ಸತ್ಯ ಸುಳ್ಳುಗಳ ಮಧ್ಯೆ ಬೆಸುಗೆ ಬೆಳೆದುಸುಳ್ಳು ಎಲ್ಲೆಲ್ಲೂ ಝೇಂಕರಿಸಿ ವಾಮನನಂತೆ ಬೆಳೆದುಬಲಿಗೊಟ್ಟು ಸತ್ಯವನುಮೋಸದ ಜೊತೆ ಒಡನಾಡಿಯಾಗಿದ್ರೋಹದ ಜೊತೆ ಸ್ನೇಹ ಪಲ್ಲವಿಸಿಅಪನಂಬಿಕೆಯ ಮಿತ್ರನ ನೆರವು ಪಡೆದುದ್ರೋಹದ ಬಲೆಯಲ್ಲಿ ಸತ್ಯವನು ಮೂಲೆಗುಂಪು ಮಾಡಿಕಾರ್ಗತ್ತಲಿನ ಖೋಲಿಯಲ್ಲಿ ಬಂಧಿಯನ್ನಾಗಿಸಿತು ಸುಳ್ಳು ಕಟ್ಟಿದ ಅರಮನೆಯಲ್ಲಿ ಕೂಪಮಂಡೂಕದಂತೆಸೂರ್ಯೋದಯವನ್ನೇ ಕಾಣದ ಸತ್ಯಕತ್ತಲಲ್ಲೇ ಕುರುಡಾಗಿಇರುಳ ಕರುಳ ಬಗೆದುಬಟ್ಟ ಬಯಲಾಗಲಾರದೆಸುಳ್ಳಿನ ವಿದ್ರೋಹದ ಮುಳ್ಳು ಬೇಲಿಯಲಿ ಸಿಲುಕಿನರಳಿ ನರಳಿ ನರ ಸತ್ತು ಗಂಟಲ ಪಸೆ ಆರಿಬೊಬ್ಬಿರಿಯಲಾಗದೆ ಕಗ್ಗತ್ತಲ ಕೂಪದಲಿ ಬೆಂದು ಒಂಟಿಯಾಗಿ ಸಾಕ್ಷಿಯ ಸಹಚರನಿಲ್ಲದ ಸತ್ಯ ಕಾಯುತಿದೆ ಬಿಡುಗಡೆಗಾಗಿಅರಸುತ್ತಿದೆ ತನ್ನ ಪರ ವಕಾಲತ್ತು ವಹಿಸುವ ಮಿತ್ರನನ್ನುತನ್ನ ಅಸ್ತಿತ್ವ ನಿರೂಪಿಸಲು ಇಂದಿಗೂ ಚಾತಕಪಕ್ಷಿಯಂತೆ *************************************************

ಸತ್ಯಕ್ಕೆ ಸಾಕ್ಷಿ ಬೇಕಾಗಿದೆ Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಪಿಂಜರ್ ಶೋಷಣೆಗೊಳಗಾಗಿ ಅಸ್ಥಿಪಂಜರಗಳಾಗುವ ಹೆಣ್ಣುಮಕ್ಕಳ ಕಥೆ ಅಮೃತಾ ಪ್ರೀತಮ್ ಪಿಂಜರ್ಮೂಲ : ಅಮೃತಾ ಪ್ರೀತಮ್ಕನ್ನಡಕ್ಕೆ : ಎಲ್.ಸಿ.ಸುಮಿತ್ರಾಪ್ರ : ಅಂಕಿತ ಪುಸ್ತಕಪ್ರ.ವರ್ಷ :೨೦೦೬ಬೆಲೆ : ರೂ.೬೦ಪುಟಗಳು : ೧೦೪          ದೇಶ ವಿಭಜನೆಯ ಕಾಲದಲ್ಲಿ  ಶೋಷಣೆಗೊಳಗಾದ ಅಮಾಯಕ ಹೆಣ್ಣು ಮಕ್ಕಳ ಕರುಣ ಕಥೆಯಿದು. ಪೂರೋ ಎನ್ನುವವಳು ಇಲ್ಲಿ ಕಥಾ ನಾಯಕಿ.       ತನ್ನ ಇಬ್ಬರು ಸಹೋದರಿಯರು ಮತ್ತು ಒಬ್ಬ ಸಹೋದರನಿರುವ ಒಂದು ಸುಖಿ ಕುಟುಂಬದಲ್ಲಿ ಹಾಯಾಗಿ ಬೆಳೆದ ಹುಡುಗಿ ಪೂರೊ. ಸೌಮ್ಯ ಸ್ವಭಾವದವಳೂ ವಿಧೇಯಳೂ ಆದ ಅವಳು ತಾಯಿ ತಂದೆಯರ ಮುದ್ದಿನ ಮಗಳು. ತಾಯ್ತಂದೆಯರು ಅವಳಿಗಾಗಿ ನೋಡಿಟ್ಟ ರಾಮಚಂದನನ್ನು ಮದುವೆಯಾಗುವ ಕನಸು ಕಾಣುತ್ತಿರುತ್ತಾಳೆ. ಅಷ್ಟರಲ್ಲಿ ಸಂಭವಿಸುತ್ತದೆ ಆ ದುರ್ಘಟನೆ. ಪೂರೋಳ ಮಾವನಿಂದಾದ ಒಂದು ಅನ್ಯಾಯಕ್ಕೆ ಪ್ರತೀಕಾರವಾಗಿ ಒಂದು ಮುಸ್ಲಿಂ ಕುಟುಂಬವು ರಷೀದನೆಂಬ ಅವರ ಯುವಕನನ್ನು ಪೂರೋಳನ್ನು ಬಲಾತ್ಕಾರವಾಗಿ ಎತ್ತಿ ಹಾಕಿಕೊಂಡು ಬರಲು ನಿರ್ಬಂಧಿಸುತ್ತದೆ. ಇಲ್ಲಿಂದಾಚೆ ಅವಳ ಜೀವನ ಸೂತ್ರ ಕಡಿದ ಗಾಳಿಪಟವಾಗುತ್ತದೆ. ರಷೀದನು ಅವಳ ಮೇಲೆ ಲೈಂಗಿಕ ಅತ್ಯಾಚಾರ ಮಾಡುವುದಿಲ್ಲವಾದರೂ ಪೂರೋ ಮಾನಸಿಕ ಹಿಂಸೆ ಅನುಭವಿಸುತ್ತಾಳೆ.    ಪೂರೋ ಹೇಗೋ ಒದ್ದಾಡಿ ರಷೀದನ ಬಂಧನದಿಂದ ತಪ್ಪಿಸಿಕೊಂಡು ತನ್ನ ಮನೆಗೆ ಓಡಿ ಬರುತ್ತಾಳೆ. ಆದರೆ ಇಲ್ಲಿ ಅವಳಿಗೆ ಮತ್ತೊಂದು ಆಘಾತ ಕಾದಿರುತ್ತದೆ. ಬೇರೊಂದು ಧರ್ಮದವರಿಂದ ಒಯ್ಯಲ್ಪಟ್ಟು ಅವರ ಜತೆಗೆ ಕೆಲವು ದಿನಗಳನ್ನು ಕಳೆದವಳ ಪಾವಿತ್ರ್ಯವನ್ನು   ಶಂಕಿಸಿ ಅವಳ ತಂದೆ ಅವಳನ್ನು ಸ್ವೀಕರಿಸುವುದಿಲ್ಲ. ತನ್ನ ಮಾನವನ್ನು ಕಳೆದುಕೊಂಡ ಅವಳಿಗೆ ಇನ್ನು ಮದುವೆಯೂ ಆಗಲಾರದೆಂದು ತಂದೆ ಅವಳನ್ನು ತಿರಸ್ಕರಿಸುತ್ತಾನೆ. ಬೇರೆ ದಾರಿ ಕಾಣದೆ ಅವಳು ರಷೀದನ ಜತೆಗೆ ಜೀವಿಸಲು ತಿರುಗಿ ಹೋಗುತ್ತಾಳೆ. ರಷೀದ ತಾನು ಮಾಡಿದ ತಪ್ಪಿಗಾಗಿ ಪಶ್ಚಾತ್ತಾಪ ಪಡುತ್ತಾನೆ. ಆದ್ದರಿಂದ ಪ್ರಾಯಶ್ಚಿತ್ತವಾಗಿ ಅವಳನ್ನು ಸ್ವೀಕರಿಸಿ ಅವಳಿಗೊಂದು ಬದುಕು ಕೊಡಲು ಸಿದ್ಧನಾಗುತ್ತಾನೆ. ಆದರೆ ಅವಳ ಹೆಸರನ್ನು ಮಾತ್ರ ಹಮೀದಾ ಎಂದು ಬದಲಾಯಿಸುತ್ತಾನೆ. ಹೀಗೆ ಪೂರೋ ತನ್ನ ಅಸ್ಮಿತೆಯನ್ನೇ ಕಳೆದುಕೊಂಡು ಬದುಕ ಬೇಕಾಗುತ್ತದೆ. ಸ್ವಾಭಿಮಾನಿಯೂ ಸಂವೇದನಾಶೀಲೆಯೂ ಆದ ಪೂರೋಗೆ ಇದು ಅಸಹನೀಯವೆನ್ನಿಸುತ್ತದೆ.   ಪೂರೋಳ ಹಾಗೆಯೇ ಪಿತೃ ಸಂಸ್ಕೃತಿಯ ಅಸಮಾನ ಧೋರಣೆಯಿಂದಾಗಿ  ಸ್ಥಾನ ಭ್ರಷ್ಟರಾಗಿ ಬೇರೆ ಬೇರೆ ರೀತಿಯಿಂದ ಅನ್ಯಾಯಕ್ಕೊಳಗಾದ ಲಾಜೋ, ಟಾರೋ ಮತ್ತು ಕಮ್ಮೋ ಎಂಬ ಇನ್ನು ಮೂವರು ಹೆಣ್ಣುಮಕ್ಕಳೂ ಈ ಕಾದಂಬರಿಯಲ್ಲಿದ್ದಾರೆ.ಹೆಣ್ಣಿನ ಬೆತ್ತಲೆ ಮೆರವಣಿಗೆ, ಲೈಂಗಿಕ ದೌರ್ಜನ್ಯಗಳಂತಹ ಕ್ರೌರ್ಯ ಪ್ರದರ್ಶನದ ಚಿತ್ರಣಗಳೂ ಇಲ್ಲಿವೆ.       ಹೆಣ್ಣು ಗಂಡಿನ ಆಕ್ರಮಣಕ್ಕೊಳಗಾಗಿ ಅವನಿಂದ ಇಷ್ಟ ಬಂದಂತೆ ಬಳಸಲ್ಪಡಬಹುದೆನ್ನುವ  ಸಮಾಜದ ಅಮಾನವೀಯ ನಿಲುವನ್ನು ಇಲ್ಲಿ ಪರೋಕ್ಷವಾಗಿ ಖಂಡಿಸಲಾಗಿದೆ.  ಸಂಸ್ಕೃತಿ, ಧರ್ಮ ಹಾಗೂ ಸಾಮಾಜಿಕ ನಿಯಮಗಳನ್ನು ಕಾಪಾಡಿಕೊಳ್ಳುವ ನೆಪದಲ್ಲಿ  ಸ್ತೀ ಯರಿಗೆ ನೀಡುವ ದೈಹಿಕ ಹಾಗೂ ಮಾನಸಿಕ ಹಿಂಸೆಗಳನ್ನು, ಆ ಯಾತನೆಗಳನ್ನು ಸಹಿಸಲಾರದೆ ಒದ್ದಾಡುತ್ತ ಅಸಹಾಯಕರಾಗುವ ಸ್ತ್ರೀ ಯರ ದಾರುಣ ಪರಿಸ್ಥಿತಿಯನ್ನೂ ಈ ಕಾದಂಬರಿ ಯಥಾವತ್ತಾಗಿ ಸ್ವಲ್ಪವೂ ಉತ್ಪ್ರೇ.ಕ್ಷೆಯಿಲ್ಲದೆ ಚಿತ್ರಿಸುತ್ತದೆ.ದೇಶ ವಿಭಜನೆಯ ಕಾಲದಲ್ಲಿ ನಡೆದ ಪೂರೋಳಂತಹ ಸಾವಿರಾರು ಹೆಣ್ಣುಮಕ್ಕಳು ಅನುಭವಿಸಿದ ನರಕ ಯಾತನೆ ಇಲ್ಲಿ ಭೀಭತ್ಸ ರೂಪವನ್ನು ತಾಳಿದೆ.    ಕನ್ನಡ ಅನುವಾದದ ಭಾಷಾ ಶೈಲಿ ತುಂಬಾ ಸುಂದರವಾಗಿದ್ದು ಒಂದೇ ಓಟಕ್ಕೆ ಓದಿಸಿಕೊಂಡು ಹೋಗುತ್ತದೆ.. ************************************************* ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

You cannot copy content of this page

Scroll to Top