ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅನುವಾದ

ತರಗೆಲೆ

ಅನುವಾದ ತರಗೆಲೆ ಕನ್ನಡ ಮೂಲ: ನಾಗರೇಖಾ ಗಾಂವಕರ್ ಇಂಗ್ಲೀಷಿಗೆ: ಸಮತಾ ಆರ್. ತರಗೆಲೆ ಮರದಡಿಯ ನೆರಳಲ್ಲಿ ಬೆಚ್ಚಗೆ ಇತ್ತು ತರಗೆಲೆ.ಕಾಲಾಂತರದ ಕರಿಯಪ್ಪುಗೆಯಲ್ಲಿ ಮುಂದೊಂದು ದಿನ ಹಾಗೇಕೊಳೆತು ಹೋಗುವುದಿತ್ತುಮರಳಿ ಮಣ್ಣಡಿ ಸೇರಿ. ದಿಗ್ಗನೇ ಬೆಳಗಿದ ನಾಜೂಕುಬೆಳಕಿನ ಹೊಳಪುಅದೇಕೋ ಅರಿವ ಹೊಸೆವ ಅನಂತದ ನೆರಳಡಿತಂದು ನಿಲ್ಲಿಸಿತು.ತರಗೆಲೆಯ ಮಾಸಿದ ಬಣ್ಣಕ್ಕೆ ಹೊಂಬಣ್ಣದ ಹೊಳಪು.ಮತ್ತೆ ಚಿಗುರಿದಂತೆ ಸಂಭ್ರಮ.ನೆಲದ ನಿಯಮದ ಹಾಗೇ.ಮಬ್ಬು ಸರಿಸಿ ‘ ಕಾಣಬಯಸಿದ್ದ ಮನಗಾಣು’ ಎಂದು ಎದೆ ತೆರೆದು ಆಹ್ವಾನಿಸಿಅಪ್ಪಿ ಮುದ್ದಿಸಿತು ಬೆಳಕು. ಬೆಳಕಿನ ದಾರಿಯಲ್ಲಿ ಕಣ್ಢಿಗೆಣ್ಣೆಬಿಟ್ಪು ಹಾಗೇ ನೋಡುತ್ತಲೇಇತ್ತು ತರಗೆಲೆ ತಪದಂತೆ ಸೈರಿಸಿ ಬೆಳಕ ಕಿರಣಹೊಳಪುಂಡು ಶಕ್ತ ನಿಲುವಲಿನಿರಾಳ ಉಸಿರಾಡುತ್ತಕಾಯುತ್ತಲೇ ಇತ್ತು. ಪ್ರತಿಮಿಸುವ ಪ್ರತಿ ಪದವೂಒಳಗಣ್ಣ ತೆರೆಸಿ, ವಿಸ್ಮಯದ ಅಂಚು ಎಲೆಯ ಸುತ್ತುಗಟ್ಟಿತಾರೀಪುಗಳ ಹೊತ್ತ ಎಲೆಯ ಭಿತ್ತಿಯಮೇಲೆ ನೂರಾರು ಚಿತ್ರಗಳ ಚಲನೆ, ಚಿಂತನೆ,ನಿಂದನೆಯ ಎಣ್ಣೆಯಲ್ಲಿ ಹುರಿದು,ಕಮಟು ವಾಸನೆ ಬಡಿಸಿ, ಮತ್ತೆ ಮರುಗಳಿಗೆ ತುಪ್ಪ ಮೂಗಿಗೆ ಸವರಿ,ಬೆಳಕು ಹದವರಿತು ತರಗೆಲೆಯನುಡಿಸಿತ್ತು. ಉರಿವ ಬೆಳಕಿಂದಜಿಗಿಯಬಲ್ಲ ಬೆಂಕಿಯ ತಾಪದಭಯಕಾಡುತ್ತಲೇ ಇತ್ತು. ಆದರೂ ತರಗೆಲೆಗೆ ತೀರದವ್ಯಾಮೋಹ.ಹಾರುವ ಪುಟ್ಟ ಗುಬ್ಬಿಯ ಬಾಯೇರಿ, ಅದಿಟ್ಟ ಮೊಟ್ಟೆಯ ಗೂಡಿಗೆ ಮಂದರಿಯಾಗಿಪುಟಪುಟ ನೆಗೆತದ ಚೀಂವ್ ಚೀಂವ್ ಮರಿಗುಬ್ಬಿಗಳಕಾಲಡಿಗೆ ರೋಮಾಂಚನಗೊಳ್ಳಬೇಕುಚಿಲಿಪಿಲಿಯೂದುವ ತೊದಲ ನುಡಿಗಳಿಗೆ ಕಿವಿಯಾಗಬೇಕು. ಜೀವವಿಲ್ಲದ ಒಣ ಎಲೆಯೆಂದವರ ಕಡೆಗೊಮ್ಮೆನಲ್ಮೆಯ ನೋಟವೆಸಗಬೇಕು. ———————ನಾಗರೇಖಾ ಗಾಂವಕರ. A dry leaf.. A dry leaf resting cosily,Under the shadow of a tree,Was about to get degradedIn the dark embrace of timeAnd get mixed up with the soil as usual. Just then all of a sudden a soft tender lightLit up everything with its gleam. And without any reasonBrought under the shade ofInfinite enlightenment.. The faded leaf got a new shineAnd beaming as if budding anewJust as the laws of the earth. Removing the darkness said the light“Perceive whatever you wanted to see “Inviting with open arms and cuddling. With the eyes wide openThe leaf kept on seeingThe path of light. Bearing the light just as a penanceDevouring the lightStood strong and breathing.And kept on waiting.. Every word casted ,Opened the inner eyeA mesmerizing rimSurrounded the leaf,Hundreds of pictures and thoughtsAre moving all over the laminaladen with the praises. Fried with the oil of accusationsMade to smell rancid,butLater buttering up to console,The light has made the leaf to sayWith the right temper. But the leaf still fearsThe heat of the firethat may emergeFrom the glowing light. But still this leaf hasAn unending yearning.Wants to fly away held inThe beak of a little sparrow,Wants to be a quilt for it’s eggs filled nest.Wants to be thrilled under the tripping feetOf the tweeting nestlings.Wants to be all ears for theirStammering chirpings. And wants to stare with love,All those,who called it“A lifeless dry leaf,” —————————————- Translated by Samatha.R

ತರಗೆಲೆ Read Post »

ಪುಸ್ತಕ ಸಂಗಾತಿ

ನಾನು ದೀಪ ಹಚ್ಚ ಬೇಕೆಂದಿದ್ದೆ

ಪುಸ್ತಕ ವಿಮರ್ಶೆ ನಾನು ದೀಪ ಹಚ್ಚ ಬೇಕೆಂದಿದ್ದೆ ನಮ್ಮ ಕಣಿವೆಯ ಹುಡುಗಿ ಅಕ್ಷತಾ ಕೃಷ್ಣಮೂರ್ತಿ ಕಳಿಸಿದ “ನಾನು ದೀಪ ಹಚ್ಚ ಬೇಕೆಂದಿದ್ದೆ”ಕವನ ಸಂಕಲನ ತಲುಪಿದೆ. ಅಣಶಿ ಘಟ್ಟದ ಶಾಲೆಯೊಂದರಲ್ಲಿ ಕಷ್ಟದಲ್ಲಿ ಕಾರ್ಯ ನಿರ್ವಹಿಸುತ್ತಾ ಬರೆವ ಓದಿನ  ತನ್ನನ್ನೇ ಅರ್ಪಿಸಿಕೊಂಡ ಅವಳ ಜೀವನ ಪ್ರೀತಿಗೆ ಮನಸ್ಸು ಅರಳುತ್ತದೆ.                     ಈಗಿತ್ತಲಾಗಿ ಓದುವುದೇ ಕಡಿಮೆಯಾದ ನನ್ನ ಬದುಕಿನಲ್ಲಿ ಆಗಾಗ ಓದಿಗೆ ಹಚ್ಚಿ ಬರೆಸುವ ಅನೇಕ ಗೆಳತಿಯರಿದ್ದಾರೆ ಎನ್ನುವುದೇ ಖುಷಿಯ ಸಂಗತಿ ಅವರೆಲ್ಲರಿಗೂ ನನ್ನ ರಾಶಿರಾಶಿ ಪ್ರೀತಿ .                              ಅಕ್ಷತಾಳ “ನಾನು ದೀಪ ಹಚ್ಚ ಬೇಕೆಂದಿದ್ದೆ”  ಕವನಸಂಕಲನದಲ್ಲಿ ಅನೇಕ ಕವನಗಳು ಪ್ರೀತಿಯಲ್ಲಿ ಅದ್ದಿ ತೆಗೆದಂತವುಗಳು ಹಾಗೆ ಮನಸ್ಸಿನಾಳಕ್ಕೆ ಇಳಿದು ನೆಲೆಗೊಳ್ಳುವಂತವುಗಳು. ” ನೀ ಮಾತನಾಡಿಸದ ಮೇಲೆ “ಕವನದಲ್ಲಿ  “ನಿನ್ನ ನೆನಪಲ್ಲಿ ಹುಟ್ಟಿದ ಕವನಗಳಿಗೆ ನೇಣು ಹಾಕಿ ಗಲ್ಲಿಗೇರಿಸಬೇಕಿತ್ತು  ಕೊನೆ ಆಸೆ ಕೇಳದೆ … ” ವಿರಹದುರಿಯಲ್ಲಿ ಬೆಂದ ಸಾಲುಗಳು..ಇನ್ನೊಂದು ಕವನದಲ್ಲಿ “ನನಗೆ ಬೇಸರವಿದೆ ಒಂದೊಂದು ಮಧ್ಯಾಹ್ನ ಕಳೆದ ಹಾಗೆಲ್ಲ ಅರಳಿದ ಗುಲ್ಮೊಹರ್  ಉದುರುತ್ತದೆ ಸದ್ದಿಲ್ಲದೆ …”ಬೇಸರವನ್ನು ಹಾಸಿ ಹೊದ್ದ0ತ  ಸಾಲುಗಳು  ಎದೆಗೆ ತಾಕುತ್ತವೆ .ರಾಧಾ ಮಾಧವರ ಪ್ರೇಮಕವನಗಳಂತೂ  ವಿಶಿಷ್ಟವಾಗಿವೆ. “ತರಬೇತಿ ಯನ್ನಾದರೂ ನೀಡು ಕೃಷ್ಣನ ಕೊಳಲ ದನಿ ಯಾಗುವುದು ಹೇಗೆಂದು ?..” ಎಂದು ರಾಧೆಯಲ್ಲಿ ಅರಹುವ ಸಾಲುಗಳು ಕೃಷ್ಣನ ಕಾಡದೇ ಇರದು .            “ಮಸರಿಯಾಗಲೇ ಬಾರದು”   ಕವನದಲ್ಲಿ ಶೋಷಣೆಯ ವಿರುದ್ಧದ ದನಿಯಿದೆ. ಸೀರೆ ಮಸರಿಯ ಪ್ರತಿಮೆಗಳಲ್ಲಿ ಕವನ ಕಣ್ಸೆಳೆಯುತ್ತದೆ. ಹಾಗೆಯೇ”ಎಲ್ಲಿಯೂ  ಮಾತನಾಡಬಾರದು” ಕವನ ಕೂಡ ಇದನ್ನೇ ಮಾತನಾಡುತ್ತದೆ .            ‌‌‌‌‌                 ಕಣಿವೆಯ ಉಸಿರಾದ ಕಾಳಿ ನದಿಯ ದಂಡೆಯಲ್ಲೂ ಕವನಗಳರಳುತ್ತವೆ .ಅಣೆಕಟ್ಟು ಒಡೆದಿದೆ ಎಂಬ ಸುಳ್ಳುಸುದ್ದಿ ಮುಗ್ಧ ಜೀವಿಗಳ ಕಾಡಿದ ಪರಿಗೆ ಕಣ್ಣು ಆರ್ದ್ರವಾಗುತ್ತದೆ .ಕಾಯುವ ಕಾಳಿ ಕಾಡುವ ಕಾಳಿ ಯಾಗದಿರಲಿ ಮನಸ್ಸು ಬೇಡುತ್ತದೆ .ಕೊನೆಯ ಆರು ಮಕ್ಕಳ ಕವಿತೆಗಳು ಬಾಲ್ಯದ ಬೆರಳು ಹಿಡಿದು ನಡೆಸುತ್ತವೆ. ಈಗಾಗಲೇ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಹಾಗೂ ಮಯೂರವರ್ಮ ಪ್ರಶಸ್ತಿ ತನ್ನದಾಗಿಸಿಕೊಂಡ ಹೆಮ್ಮೆ ಕವಯಿತ್ರಿಯ ಈ ಸಂಕಲನಕ್ಕಿದೆ.                   ಈ ಸಂಕಲನದ ಎಲ್ಲ ಕವನಗಳು ವಿಶಿಷ್ಟ ರೀತಿ ನೆಲೆಯಲ್ಲಿ ಎದೆಗೆ ಹತ್ತಿರವಾಗುತ್ತವೆ. ಥೇಟು  ಅಕ್ಷತಾಳ೦ತೆ. ತುಂಬು ಪ್ರೀತಿ ವಿಶ್ವಾಸ ಮೊಗೆ ಮೊಗೆದು ಮಡಿಲಲ್ಲಿ  ತುಂಬುತ್ತವೆ ಅವಳಂತೆ .ದೂರದಲ್ಲೆಲ್ಲೋ ಅರೆಬರೆ ಮಿಣುಕುವ ನಕ್ಷತ್ರವನ್ನು ದಿಟ್ಟಿಸುವ ಕಕ್ಕುಲತೆಯಿದೆ ಕಣಿವೆಯ ದಾರಿಯಲ್ಲಿ. ಅಕ್ಷತಾ ಬರೆದ ಅಕ್ಷರಗಳೆಲ್ಲ ಅಕ್ಷಯವಾಗಲಿ ….ಆ ಅಕ್ಷರಗಳೆಲ್ಲ ಕಣಿವೆಯ ದಾರಿಯಲ್ಲಿ ಹೂವಾಗಿ ಅರಳಿ ದಾರಿಹೋಕರ ದಣಿವಾರಿಸಲಿ ಎಂಬುದು ಮನದಾಳದ ಹಾರೈಕೆ. **************************************** ಪಿ .ಎಸ್. ಸಂಧ್ಯಾರಾಣಿ    #

ನಾನು ದೀಪ ಹಚ್ಚ ಬೇಕೆಂದಿದ್ದೆ Read Post »

ಕಾವ್ಯಯಾನ

ಅವಳನ್ನು ಸಂತೈಸುವವರು

ಕವಿತೆ ಅವಳನ್ನು ಸಂತೈಸುವವರು ಮಾಲಾ ಮ ಅಕ್ಕಿಶೆಟ್ಟಿ ಕಳೆದುಕೊಂಡೆ ನನ್ನವನನ್ನ ಶಾಶ್ವತವಾಗಿಮತ್ತೆ ಸಿಗಲಾರ’ ದುಃಖಿಸಿತು ಹೆಣ್ಣುಜೀವಮನದ ನೋವು ಹಂಚಿಕೊಳ್ಳಲುನನ್ನೊಂದಿಗೆ, ಆ ಗೆಳತಿಯ ಹೃದಯನೋವನ್ನು ತಡೆಯಲಾರದೆ, ಸಿಡಿಲುಮಳೆಯಿಲ್ಲದೇ ಬಡಿದಿತ್ತು ಬೇಸಿಗೆಯಲ್ಲಿ ಯಾವತ್ತೂ ಗಂಭೀರ ಮೂರ್ತಿತೂಕದಲ್ಲಿ ಮಾತುಗಳ ಸಂಕಲನಅಪಘಾತದಲ್ಲಿ ಬಾರಲಾರದಲೋಕಕ್ಕೆ ತೆರಳಿದ ಮರಣಒಟ ಒಟ ಎಂದು ಒಟಗುತ್ತಿದ್ದಳುತಡೆಯಲಾರದ ಸೊಲ್ಲುಗಳಲ್ಲಿ ಮೊನ್ನೆ ಇನ್ನೀತರ ಗೆಳೆತಿಯರೊಂದಿಗೆಭೇಟಿಯಾಗಿದ್ದಳು ಇಕೆ ಅಕಸ್ಮಾತ್ನೋವು ನೋವು ಎಂದು ಜರ್ಜರಿತವಾದದೇಹ, ಮತ್ತೆ ಮತ್ತೆ ಒಟಗುಡುತ್ತಿತ್ತುಸ್ಥಿತಿಯನ್ನು ಅರಿಯಲಾರದ ಇತರರುಒಟಗುಟುವಿಕೆ ನೋವು ಅರಿಯದೇ ಬೆಸರಿಸುತ್ತಿದ್ದರು ದುಃಖದ ಸುಣ್ಣದಲ್ಲಿ ಅದ್ದಿತೆಗೆದ ನನ್ನ ದೇಹಕ್ಕೆ ತುಸುಅರ್ಥವಾಗಿತ್ತು ಆಕೆಯ ವೇದನೆಸಹಜವಲ್ಲಾ? ಆತ್ಮೀಯಕೊಂಡಿ ಕಳಚಿದಾಗ ಕೈಯಿಂದನಿಲುಕದು ಸಂವೇದನೆರಹಿತರಿಗೆ ಭ್ರಮೆಯೇ ಎಲ್ಲಾ?ಹೆಣ್ಣು, ಹೆಣ್ಣನ್ನು ಅರ್ಥೈಸುವುದುರುಚಿ ಗೊತ್ತು ನೋವುಂಡವರಿಗೆವಿಚಿತ್ರ ನೋಡಿ ಪ್ರಸಂಗನನ್ನ ಮತ್ತು ಆಕೆಯ ಭೇಟಿ,ಇತ್ತುಮರುದಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ. ******************************

ಅವಳನ್ನು ಸಂತೈಸುವವರು Read Post »

ಇತರೆ

ಕಲ್ಯಾಣ ಕರ್ನಾಟಕವೆಂಬ ಬಹುತ್ವದ ಮಹಾ ಬಯಲಲಿ

ಲೇಖನ ಕಲ್ಯಾಣ ಕರ್ನಾಟಕವೆಂಬ ಬಹುತ್ವದ ಮಹಾ ಬಯಲಲಿ ನಿಂತು ಮಲ್ಲಿಕಾರ್ಜುನ ಕಡಕೋಳ  ಕಳೆದವರ್ಷದವರೆಗೆ ಹೈದ್ರಾಬಾದ್ ಕರ್ನಾಟಕವೆಂದು ಕರೆಯಲಾಗುತ್ತಿದ್ದ  ಕಲಬುರಗಿ ನಾಡನ್ನು ೧೭.೦೯.೨೦೧೯ ರಂದು ಮುಖ್ಯಮಂತ್ರಿ ಯಡಿಯೂರಪ್ಪ  “ಕಲ್ಯಾಣ ಕರ್ನಾಟಕ” ಎಂದು ನಾಮಕರಣ ಮಾಡಿದರು. ಆ ಮೂಲಕ  ಹೈದ್ರಾಬಾದ್ ಕರ್ನಾಟಕ ಕನ್ನಡನಾಡ ಪ್ರಜ್ಞೆಗೆ ಹೊಸವಿನ್ಯಾಸದ ತಾಜಾ ತಾಜಾ ಖುಷಿ ದೊರಕಿದಂತಾಗಿದೆ. ಇದು ಸಾಂಸ್ಕೃತಿಕವಾಗಿ ವಿನೂತನ ಉಮೇದು. ಅಂದು ಕಳಚೂರಿ ಬಿಜ್ಜಳನ ಕಲ್ಯಾಣ ರಾಜ್ಯದ ಮಂತ್ರಿಯಾಗಿದ್ದ ಬಸವಣ್ಣ, ಪ್ರಭುತ್ವದ ಎಲ್ಲೆಮೀರಿ ವಚನಗಳ ಮೂಲಕ ಜನಚಳವಳಿ ರೂಪಿಸಿದ್ದು ಜನಕಲ್ಯಾಣದ ಕಳಕಳಿಯ ದ್ಯೋತಕ. ಜನರಿಗೆ ಮತ್ತೆ ಅಂದಿನ ಕಲ್ಯಾಣದ  ಕನಸುಗಳನ್ನು ಇಂದು ಕಾಣುವ ತವಕ. ೧೫.೦೮.೧೯೪೭ ರಂದು ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕರೂ ಕನ್ನಡ ನೆಲದ ಅಂದಿನ ಕಲಬುರ್ಗಿ, ಬೀದರ, ರಾಯಚೂರು ಈ ಮೂರು ಜಿಲ್ಲೆಗಳು, ಮರಾಠಿಯ ಐದು, ತೆಲಂಗಾಣದ ಎಂಟು ಜಿಲ್ಲೆಗಳು ಅಂದಿನ ಮುಸ್ಲಿಂ ದೊರೆ ಮೀರ್ ಉಸ್ಮಾನ್ ಅಲಿಖಾನ್ ಬಹದ್ದೂರ್  (ಇದು ನಿಜಾಮನ ಪೂರ್ಣ ಹೆಸರು)  ಆಡಳಿತದಲ್ಲೇ ಇದ್ದವು. ಹತ್ತು ಹಲವು ಹೋರಾಟಗಳ ಫಲವಾಗಿ ೧೭.೦೯.೧೯೪೮ ರಂದು ಭಾರತದ ಒಕ್ಕೂಟಕ್ಕೆ ಇವು ಸೇರಿದವು. ಒಂದಲ್ಲ, ಎರಡಲ್ಲ ಅಜಮಾಸು ಆರುನೂರು ವರ್ಷಗಳ ಸುದೀರ್ಘ ಕಾಲದ ದೇಶಿಯ ಪರಕೀಯತೆಯಲ್ಲಿದ್ದುದು ಹೈದ್ರಾಬಾದ ಕರ್ನಾಟಕ. ಸಹಜವಾಗಿ ಉರ್ದು, ದಖನಿ, ಮೋಡಿ, ಮರಾಠಿ, ತೆಲುಗು, ಕನ್ನಡಗಳ ಬಹುಭಾಷಾ ಸೌಹಾರ್ದತೆ, ಸಾಮಾಜಿಕ ಸೌಂದರ್ಯ ಸಂಸ್ಕೃತಿಯ ಚಾರಿತ್ರಿಕ ನೆಲ ಇದು. ಇವತ್ತಿಗೂ ದಖನಿ ಛಾಯೆಯ ಉರ್ದು, ಮರಾಠಿ ಮೋಡಿಯ ಹಿಂದಿ ಭಾಷಾ ಸಂಸ್ಕೃತಿಗಳು  ಇಲ್ಲಿನ ಕನ್ನಡದ ಬದುಕಿನ ತುಂಬೆಲ್ಲ ಹಾಸು ಹೊಕ್ಕಾಗಿವೆ.  ಘಮ ಘಮಿಸುವ ಸೂಜಿಮಲ್ಲಿಗೆಯ ಹೂವರಳಿದಂತಹ ಖಮ್ಮನೆಯ ಉರ್ದು ಮಾತಾಡುವ ಮುಸ್ಲಿಮೇತರ ಅನೇಕರು ಇಲ್ಲಿರುವುದು ಸರ್ವೇಸಾಮಾನ್ಯ. ಅದೇ ನಮ್ಮ ಬೀದರ ಕನ್ನಡದ ರಾಗಮಾಧುರ್ಯವೇ ತುಸು ಭಿನ್ನ. ಅದನ್ನವರು ಎನ್ಕಿ, ತ್ವಾಡೇ ಫರಕ್ ಅಂದಾರು… ” ಯಾನ ಮಾಡ್ಲತ್ತರಿ… ಹೊಂಟೀರಿ… ನೀ ಹೋರಿ… ನಾ.. ಬರ್ತಾ…”  ಹೀಗೆ ಅದರ ದೇಸಿಯತೆಯ ಜೀವಧ್ವನಿ. ಕಲಬುರ್ಗಿಯದು ಹಾಂಗಲ್ಲ… ಯವ್ವಾ, ಯಪ್ಪಾ, ಯಣ್ಣಾ, ಯಕ್ಕಾ ಎನ್ನುವ ಮೊಗಲಾಯಿಯ ಜವಾರಿ ಬನಿ.  ನಿಜಾಮನ ಕಾಲದಲ್ಲಿ ಭಾಳ ಸಂಖ್ಯೆಯ ಸೂಫಿ – ಸಂತರು, ತತ್ವಪದಗಳ ಅನುಭಾವಿಗಳು ಮೈ ಮನಸು ಬಿಚ್ಚಿ ಕನ್ನಡದಲ್ಲಿ ಮಹಾಕಾವ್ಯಗಳನ್ನೇ ರಚಿಸಿದ್ದಾರೆ. ಹಾಗೆಂದು  ಆಳರಸ ನಿಜಾಮ ಇವರಿಗೆ ಪ್ರೇರಕ, ಪ್ರೋತ್ಸಾಹಕನೇನು ಆಗಿರಲಿಲ್ಲ.‌ ಆದರೆ  ಸೂಫಿ, ಅವಧೂತ, ಆರೂಢ ಕವಿಗಳಿಗೆ ಯಾವುದೇ ಘೋಷಿತ ಇಲ್ಲವೇ ಅಘೋಷಿತ ನಿರ್ಬಂಧಗಳನ್ನು ಆತ ವಿಧಿಸಿರಲಿಲ್ಲ ಎಂಬುದು ಮುಖ್ಯ. ಜಂಗಮನಾಗಬೇಕಾದರೆ / ಮನಲಿಂಗ ಮಾಡಿಕೊಂಡಿರಬೇಕು// ಅಂತ ಚನ್ನೂರ ಜಲಾಲ ಸಾಹೇಬ ಹಾಡಿದರೆ ಫಕೀರನಾಗಬೇಕಾದರೆ/ ಮನಃ ಧಿಕ್ಕಾರ ಮಾಡಿಕೊಂಡಿರಬೇಕು// ಇದು ಕಡಕೋಳ ಮಡಿವಾಳಪ್ಪನವರು ಜಲಾಲ ಸಾಹೇಬರಿಗೆ ಕೊಡುವ ಉತ್ತರ. ಹೀಗೆ ಇಬ್ಬರದು ಬೇರೆ ಬೇರೆ ಮತ ಧರ್ಮಗಳ ಒಂದೇ ಗುರುಮಾರ್ಗ ಪಂಥದ ಸೌಹಾರ್ದಯುತ, ಸಾಂಸ್ಕೃತಿಕ ಸಂವಾದದ ಸಣ್ಣದೊಂದು ಝಲಕ್. ಇಂಥ ನೂರಾರು ನಿದರ್ಶನಗಳು ಇಲ್ಲಿವೆ.  ಸಬ್  ಕಹತೆ ಹೈ ಈಶ್ವರ ಅಲ್ಲಾ ಅಲ್ಲಾ/ ಇದರ ಒಳಮರ್ಮ ಯಾರಿಗೂ ತಿಳಿದಿಲ್ಲಾ// ಹೀಗೆ ಉರ್ದು ಕನ್ನಡ ಮಿಶ್ರಿತ ಸಂಕರ ಪ್ರಜ್ಞೆಯಿಂದ ರೂಪುಗೊಂಡ ಅನೇಕ ತತ್ವಪದಗಳ ಭಾವ ಮತ್ತು ಭಾಷೆಯಲ್ಲಿ ಸಹೃದಯ ಸಮನ್ವಯತೆ ಸಾಧಿಸಿರುವುದನ್ನು ಗುರುತಿಸಬಹುದು . ಕಸವರಮೆಂಬುದು ನೆರೆ ಸೈರಿಸಲಾರ್ಪೊಡೆ ಪರ ಧರ್ಮಮುಮಂ/ ಪರ ವಿಚಾರಮುಮಂ// ಒಂದೂವರೆ ಸಾವಿರ ವರ್ಷಗಳ ಹಿಂದೆಯೇ ಕವಿರಾಜಮಾರ್ಗಕಾರನು ಹೇಳಿದ ಪರರ ಧರ್ಮ ಮತ್ತು ಪರರ ವಿಚಾರಗಳನ್ನು ಗೌರವಿಸುವುದೇ, ಮನುಷ್ಯ ಪ್ರೀತಿಯ ನಿಜದ ನೆಲೆಯ ಸಂಪತ್ತು. ನೃಪತುಂಗ ನೆಲದ ಇಂತಹ ಬೀಜದಮಾತುಗಳು ಇಡೀ ದೇಶಕ್ಕೇ ಇವತ್ತು ಹೆಚ್ಚು ಹೆಚ್ಚು ಅನ್ವಯಿಸಿ ಅನುಷ್ಠಾನಕ್ಕೆ ಬರಬೇಕಾಗಿದೆ. ಆಗ ಅದನ್ನು ದುರಿತ ನಿವಾರಕ ಕಾಲವೆಂದು ಕರೆಯಬಹುದು. ಬುದ್ಧಧರ್ಮದ ‘ಸಾರ’ ಸಾರುವ ಅಶೋಕ ಚಕ್ರವರ್ತಿಯ ‘ದೇವನಾಂಪ್ರಿಯ’ ಕುರುಹು ದೊರಕಿದ ಸನ್ನತಿ, ಘಟಿಕಾಲಯಗಳ ನಾಗಾವಿ, ಬಸವ ಅಲ್ಲಮರ ವಚನ ಚಳವಳಿಯ ಶಕ್ತಿಕೇಂದ್ರ,  ಸಂತ ಕಥನದ ಗೇಸುದರಾಜ್ ಬಂದೇನವಾಜ್, ಗಾಣಗಾಪುರದ ದತ್ತಾವಧೂತ,  ಮಹಾದಾಸೋಹಿ ಶರಣಬಸವೇಶ್ವರ,  ತತ್ವಪದಗಳ ಹರಿಕಾರ ಕಡಕೋಳ ಮಡಿವಾಳಪ್ಪ ಮತ್ತು ಅವರ ಅನೇಕ ಮಂದಿ ತತ್ವಪದಕಾರ ಶಿಸುಮಕ್ಕಳು, ಊರೂರಿಗೂ ದೊರಕುವರು.   ಇಂತಹ ನೂರಾರು ಮಂದಿ ಹಿಂದೂ ಮುಸ್ಲಿಂ ಸೂಫಿ ಸಂತರು ಬಾಳಿ ಬದುಕಿದ ಕಲ್ಯಾಣ ಕರ್ನಾಟಕವು ಕನ್ನಡ ಸಂಸ್ಕೃತಿ ಮತ್ತು  ಸೌಹಾರ್ದತೆಯ ಸಾಕ್ಷಿಪ್ರಜ್ಞೆಯೇ ಆಗಿದೆ. ಇವತ್ತಿಗೂ ಸಾವಳಗಿಯ ಶಿವಲಿಂಗೇಶ್ವರ ಜಾತ್ರೆಯಲ್ಲಿ ಗದ್ದುಗೆಗೆ ಮುಸ್ಲಿಂ ಧರ್ಮದ ಹಸಿರು ಗಲ್ಲೀಫದ ಗೌರವ ಸಲ್ಲುತ್ತದೆ. ಅಲ್ಲಿನ ಸ್ವಾಮೀಜಿಯವರು ಸುತ್ತುವ ರುಮಾಲು ಹಸಿರು. ಲಾಂಛನಕ್ಕೆ ಶರಣೆಂಬೆನೆಂಬ ಅಂತಃಕರಣದ ಅನುಭಾವ ಪರಂಪರೆ ಅದು. ಇಂದಿಗೂ ಕಲಬುರ್ಗಿಯ ಬಂದೇನವಾಜ ಉರುಸಿನಲ್ಲಿ, ನಿತ್ಯದ ದರ್ಗಾದ  ದರುಶನದಲ್ಲಿ ಸಹಸ್ರ ಸಹಸ್ರ ಸಂಖ್ಯೆಯ ಹಿಂದೂಗಳ ಸಕ್ಕರೆ ಲೋಬಾನದ ಅಕ್ಕರೆ. ಇದು ನಿಸರ್ಗ ಸುಭಗ ಕೋಮು ಸೌಹಾರ್ದತೆಯ ಕುರುಹು. ಆದರೆ ಇತ್ತೀಚೆಗೆ  ಕೆಲವು ಮತಾಂಧರಿಂದ ಚುನಾವಣಾ ರಾಜಕಾರಣದ ಕೊಳಕು ಹುನ್ನಾರಗಳು ಸೈತಾನ ನೃತ್ಯದ ದೆವ್ವಗಾಳಿಗಳಾಗಿ ರಕ್ಕಸತನದಿಂದ ಬೀಸುತ್ತಿರುತ್ತವೆ. ಶತಮಾನಗಳಿಂದ ಕೃಷ್ಣೆಯ ಒಂದು ದಡ ಹರಿದಾಸ ಸಾಹಿತ್ಯ, ಮತ್ತೊಂದು ದಡ ತತ್ವಪದ ಮತ್ತು ವಚನಗಳ  ಬಹುತ್ವದ ಜೀವತುಂಬಿ ಹರಿದಿದೆ. ” ಓಂ ಏಕ್ ಲಾಖ್ ಅಸ್ಸೀ ಹಜಾರ ಪಾಚೋಪೀರ್ ಮೌನ್ಧೀನ್ ” ತಿಂಥಣಿ ಮೋನಪ್ಪಯ್ಯನ  ಇಂಥ ನುಡಿಗಟ್ಟುಗಳು  ಹಿಂದೂ ಮುಸ್ಲಿಂ ಭಾವೈಕ್ಯತೆಗೆ ಹಿಡಿದ ನಿಲುಗನ್ನಡಿ. ಎಡ – ಬಲ ಪಂಥಗಳೆರಡರ ಅತಿರೇಕಗಳನ್ನು ಮೀರಿದ ಲೋಕಪಂಥದ ಬೆರಗಿನ ಬಯಲು ನಮ್ಮ ಕಲ್ಯಾಣ ಕರ್ನಾಟಕದ ನೆಲ. ಅಫಜಲಪುರ, ಆಳಂದ, ಜೇವರ್ಗಿ, ಶಹಾಪುರ ಹೀಗೆ ಕಲ್ಯಾಣ ಕರ್ನಾಟಕದ ಅನೇಕ ಭಾಗಗಳಲ್ಲಿ ಹಿಂದೂಗಳ ಮನೆದೇವರುಗಳೆಂದರೆ ಸೂಫಿ ಸಂತರು. ಕರ್ಜಗಿಯ ಸೈಫುಲ್ಲಾ ಮುಲ್ಕ ದರ್ಗಾ, ನೀಲೂರು ಮಹಬೂಬ ಸುಬಾನಿ ದರ್ಗಾ, ಹೈದ್ರಾ ದರ್ಗಾಗಳ ಸೂಫಿ ದೈವಗಳು ಬಹುಪಾಲು ಹಿಂದೂ ವೀರಶೈವ, ಲಿಂಗಾಯತರ ಪಾಲಿನ ಉಪಾಸನ ದೇವರುಗಳು. ಹಾಗೇನೇ ಅನೇಕ ಮಂದಿ ಮುಸಲ್ಮಾನರು ಎಲ್ಲ ಹಿಂದೂ ಹಬ್ಬಗಳನ್ನು ಆಚರಿಸುತ್ತಾರೆ. ಭಸ್ಮವಿಭೂತಿ ಧರಿಸುತ್ತಾರೆ. ಮೊಹರಮ್ ಹಬ್ಬಗಳಲ್ಲಿ ಫಕೀರರಾಗಿ ಬಹುಪಾಲು ಮುಸ್ಲಿಮೇತರರು ಅಲಾಯಿ ಹಬ್ಬಗಳನ್ನು ಸಂಭ್ರಮದಿಂದ ಆಚರಿಸುತ್ತಾರೆ. ಹೀಗೆ ಭಾವೈಕ್ಯತೆಗೆ ಕಲ್ಯಾಣ ಕರ್ನಾಟಕ ಹೇಳಿ ಮಾಡಿಸಿದ ಹೆಸರು. ಒಂದೆರಡು ಜಿಲ್ಲೆಯಲ್ಲಿ ಹರಿದಾಡುವ ಕಾವೇರಿ ಸಮಗ್ರ ಕನ್ನಡನಾಡಿನ ಜೀವನದಿಯಾಗಿ ಅಲ್ಲಿನ ಸಿನೆಮಾಗಳಿಗೆ, ಸಾಹಿತಿಗಳಿಗೆ ಗೋಚರಿಸುತ್ತಾಳೆ. ಆದರೆ ನಮ್ಮಭಾಗದ ಆರೇಳು ಜಿಲ್ಲೆಗಳ ತುಂಬೆಲ್ಲ ತುಂಬಿ ತುಳುಕುವ, ಇಲ್ಲಿನ ಜನಜೀವನದ ಸಮಗ್ರ ಬದುಕನ್ನು ಸಮೃದ್ಧಗೊಳಿಸುವ ಕೃಷ್ಣೆ, ಭೀಮೆಯರು ಬೆಂಗಳೂರು ಕೇಂದ್ರಿತ ಸಾಂಸ್ಕೃತಿಕ ಲೋಕಕ್ಕೆ, ಸಿನೆಮಾ ಜಗತ್ತಿಗೆ ಇವು ಬರೀ ನದಿಗಳಾಗಿಯೇ ಗೋಚರ. ಈ ಬಗೆಯ ಸಾಂಸ್ಕೃತಿಕ ರಾಜಕಾರಣ ಕುರಿತು ತಲೆ ಕೆಡಿಸಿಕೊಳ್ಳದ ಮುಗ್ಧ ಮೊಗಲಾಯಿ ಮಂದಿ ನಮ್ಮವರು. ನಿಜವಾದ ರಾಜಕೀಯಪ್ರಜ್ಞೆ ಎಂಬುದರ ಅರಿವಿರದೇ ಥೇಟ್ ರಾಜಕೀಯ ಪಕ್ಷಗಳ ಕಾರ್ಯಕರ್ತರಂತೆ ಮಾತಾಡುವುದನ್ನೇ ರಾಜಕೀಯಪ್ರಜ್ಞೆ ಎಂದು ನಂಬಿರುವ ಹುಂಬತನ ನಮ್ಮವರದು. ಅತಿಯಾದ ಸಿಹಿ, ಅತಿಯಾದ ಖಾರಪ್ರಿಯರು ಇವರು. ಹೀಗೆ ಎರಡರಲ್ಲೂ  ಅತಿರೇಕಗಳು.  ಕೃಷ್ಣೆ ಮೈತುಂಬಿ ಹರಿದರೂ ಕಷ್ಟಗಳು ಬಗೆ ಹರಿಯಲಿಲ್ಲ. ಅಷ್ಟಕ್ಕೂ ಕೃಷ್ಣೆ ರೈತರ ಹೊಲಗಳಿಗಿಂತ ಕೆಲಸಗೇಡಿ ಹಳ್ಳ್ಳ ಕೊಳ್ಳಗಳಲ್ಲೇ ಹೆಚ್ಚು ಹರಿಯುತ್ತಿರುವಳು. CADA  ಎಂಬುದು ಈ ಭಾಗದಲ್ಲಿ ಕಿಲುಬು ಕಾಸಿನಷ್ಟು ಕೆಲಸ ಮಾಡಿಲ್ಲ.   ೩೭೧ ಜೆ ‘ಲಾಗೂ’ ಆದರೂ ನಮ್ಮ ಎಲ್ಲ ಸಂಕಟಗಳು ಹಾಗೇ ಇವೆ. ನಾವು ಹಕ್ಕಿನೊಡೆಯರಾಗಿ ಮೂಲ ಸೌಲಭ್ಯಗಳನ್ನು ಪಡೆಯದೇ ಬಡವಾದವರು. ಕನ್ನಡನಾಡಿಗೆ ಇಬ್ಬರು ಮುಖ್ಯಮಂತ್ರಿಗಳನ್ನು ಕೊಟ್ಟ ನಾವು ಹಿಂದುಳಿದವರಲ್ಲ, ಹಿಂದುಳಿಸಲ್ಪಟ್ಟವರು. ಎಲ್ಲಕ್ಕೂ ” ಜಾಂದೇ ಚೋಡೋ ” ಎಂದು ಉದಾಸೀನ ತೋರುವ ಅಸಡ್ಡೆ ಜಾಯಮಾನ ನಮ್ಮದು. ಜವಾರಿ ಮುಗ್ದತೆ ಉಳಿಸಿಕೊಂಡುದೇ ನಮ್ಮ ಹೆಗ್ಗಳಿಕೆ. ಕಲಬುರ್ಗಿ ಹೆಸರಿನೊಂದಿಗೆ ಅಂಟಿಕೊಂಡಿರುವುದು ಕೆಂಡದ ಬಿಸಿಲು ಮತ್ತು ತೊಗರಿ.  ಕಲಬುರ್ಗಿಯಲ್ಲಿ ಸರ್ಕಾರದ ಖರೀದಿಗಿಂತಲೂ ಭರ್ಜರಿಯಾಗಿ ಖಾಸಗಿ ಖರೀದಿದಾರರ  ಕಿಗ್ಗಳದ ರೇಟುಗಳಿಗೆ ರೈತರು ತೊಗರಿ ಮತ್ತು ಹತ್ತಿ ಮಾರುವಂತಾಗಿದೆ. ಸರಕಾರ ಎಂಬುದರ ದರಕಾರವಿಲ್ಲದೇ ಹೆದ್ದಾರಿಗಳ  ಬಾಜೂಕೆ ರಾಜಾರೋಷವಾಗಿ ಖಾಸಗಿ ಸಾಹುಕಾರರು  ತಕ್ಕಡಿ ಕಲ್ಲುಗಳನ್ನಿಟ್ಟುಕೊಂಡು ಮುಗ್ದರೈತರು ಬೆಳೆದ ಹತ್ತಿ, ತೊಗರಿ, ಇತರೆ ಫಸಲುಗಳನ್ನು ಕಾಟಾ ಖರೀದಿ ಮಾಡುವ ಕಾಳದಂಧೆ ಯಾವೊಂದು ಎಗ್ಗಿಲ್ಲದೇ ಜಗ್ಗಿ ಪ್ರಮಾಣದಲ್ಲೇ ಜರುಗುತ್ತಲಿರುತ್ತವೆ. ಅದೇ ರಸ್ತೆಗಳಲ್ಲಿ ಮಂತ್ರಿ, ಎಮ್ಮೆಲ್ಲೆ, ಎಂಪಿ, ಇತರೆ ರಾಜಕಾರಣಿಗಳು ಅದನ್ನು ನೋಡುತ್ತಲೇ ಓಡಾಡುತ್ತಾರೆ. ರೈತರನ್ನು ಲೂಟಿ ಮಾಡುವ ಈ ಹಗಲು ದರೋಡೆಕೋರ ದಂಡನ್ನು ಇದುವರೆಗೂ ಯಾವೊಬ್ಬ ತೀಸ್ಮರ್ಕ ರಾಜಕಾರಣಿ ತಡವಿಕೊಂಡ ನಿದರ್ಶನವಿಲ್ಲ. ಇಂತಹ ಹತ್ತು ಹಲವು ಶೋಷಣೆಗಳ ಬಲಿಪಶುಗಳಾಗಿರುವ ನಮ್ಮವರನ್ನು ಹೆಸರಲ್ಲಿ ಮಾತ್ರ ಕಲ್ಯಾಣ ಗೊಳಿಸಿದ್ದಾಗಿದೆ.  ಹೈದ್ರಾಬಾದ್ ಕರ್ನಾಟಕ ಹೆಸರಲ್ಲಷ್ಟೇ ಬದಲಾದರೆ ಸಾಕೇ.? ಖರೇ ಖರೇ ಕಲ್ಯಾಣ ಕರ್ನಾಟಕ ಆಗೋದು ಯಾವಾಗ ***********************************************   

ಕಲ್ಯಾಣ ಕರ್ನಾಟಕವೆಂಬ ಬಹುತ್ವದ ಮಹಾ ಬಯಲಲಿ Read Post »

ಅಂಕಣ ಸಂಗಾತಿ, ಹೊಸ ದನಿ-ಹೊಸ ಬನಿ

ಅಂಕಣ ಬರಹ ಘೋಷಣೆಗಳ ನಡುವೆ ರೂಪಕಗಳಿಗೂ ಕಾತರಿಸುವ ಕಲ್ಮೇಶ ತೋಟದ್  ಕವಿತೆಗಳು ಕಲ್ಮೇಶ ತೋಟದ್ . ಮೂರು ಗೇಣಿನಷ್ಟೇ ಅಂತರ ಭಾಸವಾಗುತ್ತಿದ್ದ ಬಾನಹಂದರ ನೋಡಲದೆಷ್ಟು ಸುಂದರ ಆಕಾಶ ಭೂಮಿ ಮಂದಾರ ಅಪ್ಪನ ಹೆಗಲದು ಸುಂದರ ಇಂಥ ಭಾವುಕ ಸಾಲುಗಳಲ್ಲಿ ಅಪ್ಪನ ಹೆಗಲನ್ನು ವರ್ಣಿಸಿ ಅಪ್ಪನನ್ನು ಕುರಿತಂತೆ ಈವರೆಗೂ ಇದ್ದ ಇಮೇಜುಗಳಿಗೆ ಮತ್ತೊಂದು ಹೊಸ ರೂಪಕವನ್ನು ಕೊಡಮಾಡಿರುವ ೨೬ರ ಹರಯದ ಯುವ ಕವಿ ಕಲ್ಮೇಶ ತೋಟದ ಅವರ ಕವಿತೆಗಳನ್ನು ಪರಿಚಯಿಸುವುದಕ್ಕೆ ಸಂತೋಷ ಮತ್ತು ಸಂಭ್ರಮಗಳು ಮೇಳೈಸುತ್ತವೆ.  “ಕೌದಿ” ಶೀರ್ಷಿಕೆಯಲ್ಲಿ ಈಗಾಗಲೇ ಒಂದು ಸಂಕಲನ ಪ್ರಕಟಿಸಿರುವ ಈ ಕವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದ ಸ್ನಾತಕೋತ್ತರ ಪದವಿ ಪಡೆದು ಸದ್ಯ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಕಲ್ಮೇಶ ತೋಟದ ತಮ್ಮ ಕವನ ಸಂಕಲನಕ್ಕೆ ಕವಿಯ ಮಾತು ಬರೆಯುವಾಗ ಹೀಗೆ ಟಿಪ್ಪಣಿಸುತ್ತಾರೆ; “ಅವ್ವ ಹಸಿದ ಬೆಕ್ಕಿನ ಮರಿಯೊಂದು ಕಂಡರೆ ಹಿಂದೆ ಮುಂದೆ ನೋಡದೆ ಒಂದಷ್ಟು ಹಾಲು ಹಾಕುತ್ತಾಳೆ. ನಾಯಿ ಕಂಡರೆ ಅನ್ನ ಹಾಕುತ್ತಾಳೆ. ಹಸು ಕಂಡರೆ ಒಂದು ರೊಟ್ಟಿ ಕೊಟ್ಟು ಬೆನ್ನು ಸವರುತ್ತಾಳೆ‌. ಪಕ್ಷಿಗಳಿಗೆ ಕಂಪೌಂಡ್ ಮೇಲೆ ಹಸನು ಮಾಡಿ ಉಳಿದ ಕಾಳು ಕಡ್ಡಿ ಚಲ್ಲುತ್ತಾಳೆ. ತುಳಸಿ ಗಿಡದ ಕುಂಡಲಿ ಪಕ್ಕ ಇರುವೆಗಳಿಗೆ ಸಕ್ಕರೆ ಹರವುತ್ತಾಳೆ. ಕೂದಲು, ಪಿನ್ನು ಮಾರಲು ಬರುವ ಮಹಿಳೆಯರಿಗೆ ತಾನಾಗಿಯೇ ಕುಡಿಯಲು ನೀರು ಬೇಕೆ ಎಂದು ಕೇಳಿ ನೀರು ಕೊಡುತ್ತಾಳೆ. ಇಷ್ಟೆಲ್ಲ ಮಾಡಿದ್ದಕ್ಕೆ ಆಕೆ ಫೋಟೋ ಕ್ಲಿಕ್ಕಿಸಿಕೊಂಡೋ, ಸೆಲ್ಫಿ ತೆಗೆದುಕೊಂಡು ಸಾಕ್ಷಿ ನೀಡುವುದಿಲ್ಲ. ಏನೂ ಮಾಡಿಯೇ ಇಲ್ಲವೆಂಬಂತೆ ಎಲ್ಲವನ್ನು ಮರೆತು ಮತ್ತೆ ನಾಳೆಗೆ ಸಿದ್ಧಳಾಗುತ್ತಾಳೆ”. ಫೇಸ್ಬುಕ್ ಪುಟ ತೆರೆದರೆ ಸಾಕು, ಸುಮ್ಮ ಸುಮ್ಮನೇ ಪಟ ಬದಲಿಸುವ, ಸಣ್ಣ ಪುಟ್ಟ ಸಂಗತಿಗಳನ್ನೂ ಎಂಥದೋ ಸಾಧನೆ ಎಂಬಂತೆ ಬಿಂಬಿಸಿಕೊಳ್ಳುವ ಸೆಲ್ಫಿ ಹುಚ್ಚಿನವರು ಗಮನಿಸಲೇ ಬೇಕಾದ ಮತ್ತು ಅನುಸರಿಸಲೇ ಬೇಕಾದ ಸಾಲುಗಳು ಇವು. ತಮ್ಮ ಪಾಡಿಗೆ ತಾವು ಮಾನವೀಯ ಕೆಲಸಗಳನ್ನು ಮಾಡುತ್ತಿದ್ದರೂ ತೋರಿಸಿಕೊಳ್ಳದೇ ಹೇಳಿಕೊಳ್ಳದೇ ತಮ್ಮಲ್ಲೇ ಸುಖ ಕಾಣುತ್ತಿರುವವರನ್ನು ನಮ್ಮ ಫೇಸ್ಬುಕ್ಕಿಗರು ಗಮನಿಸದೇ ಇರುವುದು ಇದಕ್ಕೆ ಕಾರಣ. ಕವಿಯೆಂದು ಬೀಗುತ್ತಿರುವ ಹಲವರು ಮೊದಲು ತಮ್ಮ ಸುತ್ತ ಇರುವ ಜನ ಹೇಗೆ ಯಾವುದಕ್ಕೆ ಪ್ರತಿಕ್ರಯಿಸುತ್ತಾರೆ ಎನ್ನುವುದನ್ನು ಕಂಡುಕೊಳ್ಳದೇ ಅಂದು ಕೊಂಡದ್ದನ್ನೇ ಕಾವ್ಯ ಎಂದು ಬರೆಯುವಾಗ ಈ ಕವಿಯ ಈ “ನೋಟ” ಅವರ ಕವಿತೆಗಳಲ್ಲೂ ಚಾಚಿವೆ. “ಸರ್ಕಾರಿ ಬಸ್ಸಿನ ಕೊನೆಯ ಗಿರಾಕಿ” ಕವಿತೆ ಕೂಡ ಇಂಥದೇ ಬೆರಗಿನ ನೋಟದಲ್ಲೇ ಅರಳುತ್ತದೆ ಮತ್ತು ನಾವೆಲ್ಲರೂ ನೋಡಿ ಗಮನಿಸದೇ, ಗಮನಿಸಿದ್ದರೂ ತುಲನೆ ಮಾಡದ ಸಂಗತಿಗಳನ್ನು ಚಿತ್ರಿಸುತ್ತದೆ. ಕಣ್ಣಿಗೆ ಕಂಡದ್ದನ್ನು ಕಂಡಹಾಗೆ ಬರೆಯುತ್ತಿದ್ದ ಕವಿ ಒಮ್ಮೆಲೇ “ಅಜ್ಜನ ದೋತ್ರಕ್ಕೆ ಎಷ್ಟೊಂದು ನೆರಿಗೆಗಳು ಥೇಟ್ ಅವನ ಮುಖದ ಮೇಲಿನಂತೆ” ಎಂದು ಹೇಳುತ್ತ ರೂಪಕದ ಸಾಧ್ಯತೆಯನ್ನು ತೋರುತ್ತಾರಲ್ಲ, ಈ ಇಂಥ ಯತ್ನಗಳೇ ನಾಳೆಯ ಇವರ ಕವಿತೆಗಳನ್ನು ಎದುರು ನೋಡಲು ಪ್ರೇರೇಪಿಸುತ್ತದೆ. “ರಾಮನಾದರೂ ದಕ್ಕಲಿ, ರಹೀಮನಾದರೂ ದಕ್ಕಲಿ ಬಿಕ್ಕಿ ಅಳುವ ಕಂದನ , ಕಣ್ಣೀರು ಕೊಂಚ ಒರೆಸಲಿ” “ದೇವರು ತುಂಬ ದೊಡ್ಡವನು” ಹೆಸರಿನ ಕವಿತೆಯ ಆಶಯ ಮಾನವೀಯ ಗುಣ ಇಲ್ಲದವರಿಗೆ ಸುಲಭಕ್ಕೆ ದಕ್ಕದ್ದು ಮತ್ತು ಸಿದ್ಧಿಸದ್ದು ಕೂಡ. ಏಕೆಂದರೆ ತಮ್ಮ ತಮ್ಮ ದೇವರು ಧರ್ಮ ಜಾತಿಗಳನ್ನೇ ದೊಡ್ಡದೆಂದು ಭಾವಿಸುವವರ ನಡುವೆ ಇಂಥ ಔದಾರ್ಯ ಮತ್ತು ಆತ್ಮ ನಿರ್ಭರತೆ ಇಲ್ಲದ ಯಾರೂ ಕವಿಯೆಂದು ಹೇಳಿಕೊಂಡ ಮಾತ್ರಕ್ಕೇ ಕವಿಯಾಗುವುದಿಲ್ಲ, ಅನ್ಯರ ಕಷ್ಟವನ್ನೂ ತನ್ನದೆಂದು ಭಾವಿಸದವನು ಕವಿಯಾಗುವುದು ಆಗದ ಮಾತು. ಆದರೆ ಇಷ್ಟು ಚಂದದ ದಾರಿಯಲ್ಲಿ ನಡೆದಿದ್ದ ಈ ಕವಿತೆ ಅಂತ್ಯದಲ್ಲಿ ಹೇಳಿಕೆಯಾಗಿ ಬದಲಾಗುತ್ತದೆ; “ಕಟ್ಟುವುದೇ ಆದರೆ ಒಂದು ಶಾಲೆಯನ್ನೊ, ಶೌಚಗೃಹವನ್ನೊ ಕಟ್ಟೋಣ ಹಸಿವು, ಅಜ್ಞಾನ, ಮಾನದ ಮುಂದೆ ಯಾವ ದೇವರೂ ದೊಡ್ಡವನಲ್ಲ ಅಲ್ಲವೆ…” ಇಂಥ ಹೇಳಿಕೆಗಳು ಮತ್ತು ಘೋಷಣೆಗಳು ಒಂದು ವರ್ಗದ ಮನಸ್ಥಿತಿ ಇದ್ದವರಿಗೆ “ಹಿತ” ಅನ್ನಿಸುವದರಿಂದ ಮತ್ತು ಫೇಸ್ಬುಕ್ ಪುಟಗಳ ತುಂಬ ಅಂಥವರದೇ ಲೈಕು ಕಮೆಂಟುಗಳು ತುಂಬಿಕೊಳ್ಳುವುದರಿಂದ ಯುವ ಕವಿಗಳು ಕ್ಷಣದ ಹೊಗಳಿಕೆಗಾಗಿ ಹೇಳಿಕೆಗಳಲ್ಲೋ ಘೋಷಣೆಗಳಲ್ಲೋ ಕವಿತೆಯನ್ನು ಧ್ವನಿಸದೇ ಪ್ರತಿಮೆ ರೂಪಕಗಳ ಮೂಲಕವೇ ತಮ್ಮ ಅಭಿವ್ಯಕ್ತಿಯನ್ನು ಪ್ರಚುರಗೊಳಿಸುವ ಅಗತ್ಯತೆ ಇದೆ. “ಒಂದರೆಘಳಿಗೆಯ ನಿದ್ದೆ” ಕವಿತೆ ಕೂಡ ಮೇಲ್ನೋಟಕ್ಕೆ ರಿಯಲ್ ಮತ್ತು ವರ್ಚ್ಯುಯಲ್ ಪ್ರಪಂಚಗಳ ಡಿಸೆಕ್ಷನ್ ಥರ ಕಂಡರೂ ಆ ಡಿಸೆಕ್ಷನ್ನಿಗೆ ಬೇಕಾದ ಪರಿಕರಗಳನ್ನು ಇಟ್ಟುಕೊಳ್ಳದೇ ಥಟ್ಟನೇ ಹೊಳೆದ ಜನ ಮನ್ನಣೆಗೆ ಬರೆದ ಸಾಲುಗಳಾಗಿ ಬದಲಾಗಿವೆ. ಈ ಎರಡೂ ಕವಿತೆಗಳ ಆತ್ಮವನ್ನು ಬೆಳಗಿ ದೈಹಿಕ ನ್ಯೂನತೆಗಳನ್ನು ಸರಿಪಡಿಸಿದರೆ ಎರಡೂ ಕೂಡ ಉತ್ತಮ ರಚನೆಗಳಾಗುವ ವಸ್ತು ಹೊಂದಿವೆ. “ಸಾವು ಅಂತಿಮ ಎನಿಸಿದಾಗ ನೀನೊಮ್ಮೆ” ಎಂಬ ಸಾಲುಗಳನ್ನು ಪ್ರತಿ ಅನುಪಲ್ಲವಿಯಲ್ಲಿ ಮತ್ತೆ ಮತ್ತೆ ಧೇನಿಸುವ ಕವಿತೆ ಅದ್ಭುತ ಚಿತ್ರಗಳನ್ನು ಚಿತ್ರಿಸುತ್ತಲೇ ನಿಜಕ್ಕೂ ಬದುಕಿಗೆ ಬೇಕಾದ ಪರಿಕರಗಳನ್ನು, ಜರೂರು ಬೇಕಿರುವ ಆತ್ಮ ಸಾಂಗತ್ಯದ ಅನಿವಾರ್ಯಗಳನ್ನೂ ಎಳೆ ಎಳೆಯಾಗಿ ಬಿಚ್ಚಿಡುತ್ತಲೇ ಬದುಕಿದ್ದಷ್ಟೂ ದಿನ ಅರ್ಥ ಪೂರ್ಣವಾಗಿ ಬದುಕಬೇಕಿರುವ ಹೃದಯವಂತಿಕೆಯ ಚಿತ್ರಣವಾಗಿದೆ. ಆದರೆ ಈ ಕವಿ ಏಕೋ ಘೋಷಣೆಗೋ ಅಥವ ಹೇಳಿಕೆಗೋ ಹೆಚ್ಚು ಮಹತ್ವ ಕೊಟ್ಟ ಕಾರಣಕ್ಕೆ ಕಡೆಯ ಸಾಲುಗಳಲ್ಲಿ ಕವಿತೆ ತಟಸ್ಥವಾಗಿ ಬಿಡುತ್ತದೆ. “ಜಿನುಗುವ ಮಳೆಯಲ್ಲಿ ಬಿಕ್ಕುವ ಹಳೆ ನೆನಪುಗಳ ಕೆಣಕಬೇಡ ಸಖಿ” ಎಂದು ಆರಂಭವಾಗುವ ತಲೆ ಬರಹವಿಲ್ಲದ ಪದ್ಯದ ಆಶಯ ಮಹತ್ವದ್ದು. ಘೋಷಣೆ ಅಥವ ಹೇಳಿಕೆಗಳಿಲ್ಲದ ನಿಜದ ಮಾತುಗಳೇ ತುಂಬಿರುವ ಪದ್ಯ ಹರೆಯದ ಹುಡುಗರು ಸಾಮಾನ್ಯ ಸೃಷ್ಟಿಸುವ ಪ್ರೀತಿ, ಪ್ರೇಮಗಳ ಕುರಿತಾದ ಅಂಶಗಳಿದ್ದರೂ ಭೋರ್ಗರೆತ ಮತ್ತು ಸುಳಿ ತಿರುವುಗಳ ಚಿತ್ರಣವಿಲ್ಲದೆಯೂ ಸರಾಗ ಹರಿದು ಕಡಲು ಸೇರುವ ನದಿಯ ಹರಿವಂತೆ ಭಾಸವಾಗುತ್ತದೆ. “ಹುಡುಕುತ್ತಲೇ ಇದ್ದಾಳೆ ಅವ್ವ ಕುಂಕುಮದ ಬಟ್ಟಲಲ್ಲಿ, ಅರಿಶಿಣದ ಬೇರಿನಲ್ಲಿ ಮಲ್ಲಿಗೆ ಹೂ ದಾರದಲ್ಲಿ ಬಳೆಯ ಸದ್ದಿನ ಗುಂಗಿನಲ್ಲಿ ಗೆಜ್ಜೆನಾದದ ಸದ್ದಿನಲ್ಲಿ…..” ಇಲ್ಲವಾದ ಅಪ್ಪನನ್ನು ಸಾರ್ಥಕವಾಗಿ ಚಿತ್ರಿಸಿದ ಸಾಲು ಇಷ್ಟವಾಗುತ್ತದೆ. ಆದರೆ ಇನ್ನೂ ಬೆಳಸಬಹುದಾಗಿದ್ದ ಈ ಪದ್ಯ ಅವಸರದಲ್ಲಿ ಬರೆದಂತೆ ಕಾಣುತ್ತದೆ. “ಎರೆಮಣ್ಣ ನೆಲದಲ್ಲಿ ತರತರದ ಸೊಬಗಲ್ಲಿ ಮೂಡಗಾಳಿಯ ಎದುರು, ಮಸಡಿ ಬಿರಿತರು ಕೂಡ ಬನ್ನಿಗಿಡದಡಿಯ ಕಲ್ಲು ಪಾಂಡವರಿಗೆ ಕೈ ಮುಗಿದು ದೆವ್ವದ ಗಾಳಿಗೆ ಎದೆಯೊಡ್ಡಿ ನಿಂತ ಭೂತಾಯಿ ಇವಳು ಜನಕರಾಜನ ಮಗಳು..” ಎನ್ನುವ ಸಾಲುಗಳನ್ನು ಓದುತ್ತಿದ್ದಾಗ ಯಾಕೋ ಲಂಕೇಶರ ಅವ್ವ ಪದ್ಯ ಬೇಡ ಬೇಡ ಎಂದರೂ ನೆನಪಾಗುತ್ತದೆ. ಕನ್ನಡದ ಕವಿತೆಗಳೇ ಹಾಗೆ, ಒಂದರ ನೆರಳು ಮತ್ತೊಂದರ ತಲೆಗೆ ತಾಕುತ್ತದೆ, ಮಗದೊಂದು ತೋರಿದ ಝಳಕ್ಕೆ ಎಗ್ಗು ಸಿಗ್ಗಿಲ್ಲದೇ ಅರಳಿಕೊಳ್ಳುತ್ತದೆ, ಹೊರಳಿಕೊಳ್ಳುತ್ತದೆ. ಶ್ರೀ ಕಲ್ಮೇಶ ತೋಟದ ಈಗಿನ್ನೂ ೨೬ರ ಹರಯದ ಯುವಕ. ಅವರು ಸಾಗಬೇಕಿರುವ ದಾರಿ ಮತ್ತು ಮುಟ್ಟ ಬೇಕಿರುವ ಗುರಿ ಬಹಳ ದೊಡ್ಡದಿದೆ. ಆತ್ಮ ಸಂಗಾತಕ್ಕೆ ಅನುಭವದ ಹಾದಿಯ ಎಡರು ತೊಡರುಗಳನ್ನು ಬಳಸುತ್ತಲೇ ಅವನ್ನೇ ಕವಿತೆಯ ರೂಪಕಗಳನ್ನಾಗಿ ಬಳಸುವ ಜಾಣ್ಮೆ ಮತ್ತು ಕಲೆ ಅವರು ಸಿದ್ಧಿಸಿಕೊಳ್ಳುತ್ತ ಇದ್ದಾರೆ ಎನ್ನುವುದು ಅವರ ರಚನೆಗಳ ಮೇಲ್ನೋಟದ ಓದಿನ ಫಲಶೃತಿ. ಇಂಥ ಕವಿಗಳು ಅವರಿವರು ಬೆನ್ನು ತಟ್ಟಿದರೆಂಬ ಖುಷಿಯಲ್ಲಿ, ಮೈ ಮರೆಯದೇ ತಮ್ಮ ಅನುಭವಕ್ಕೆ ಬಂದ ಸಂಗತಿಗಳತ್ತಲೇ ಕಿವಿ ಮೂಗು ಕಣ್ಣುಗಳನ್ನು ಕೀಲಿಸಿದರೆ ಮಾತ್ರ ಹೇಳಿಕೆಗಳಿಂದಲೂ ಘೋಷಣೆಗಳಿಂದಲೂ ಮುಕ್ತರಾಗಬಲ್ಲರು. ಆ ಅಂಥ ಶಕ್ತಿ ಇರುವ ಈ ಯುವಕವಿ ತಕ್ಷಣಕ್ಕಲ್ಲವಾದರೂ ನಿಧಾನದ ಓದಿನಿಂದ, ಪೂರ್ವ ಸೂರಿಗಳ ಒಡನಾಟದಿಂದ ಪಡೆಯಲಿ, ಪಡೆಯುತ್ತಾರೆ ಎನ್ನುವ ಹಾರೈಕೆಯ ಜೊತೆಗೇ ಅವರ ಆಯ್ದ ಐದು ಕವಿತೆಗಳನ್ನು ಕಾವ್ಯಾಸಕ್ತರ ಓದಿಗೆ ಶಿಫಾರಸು ಮಾಡುತ್ತಿದ್ದೇನೆ; ಕಲ್ಮೇಶ ತೋಟದ್ ಕವಿತೆಗಳು 1.ಸರ್ಕಾರಿ ಬಸ್ಸಿನ ಕೊನೆಯ ಗಿರಾಕಿ ಕಿಕ್ಕಿರಿದು ತುಂಬಿದ ವಾ.ಕ.ರ.ಸಾ.ಸಂ ಬಸ್ಸಿನಲ್ಲಿ ಎಷ್ಟೊಂದು ಮುದ್ರಣಗೊಳ್ಳದ ಬದುಕುಗಳಿವೆ ಬಸ್ಸು ತನ್ನ ಪಾಡಿಗೆ ತಾ ಹೊರಟಿರುತ್ತದಷ್ಟೆ ಒಳಗೆ ಅಲ್ಲಲ್ಲಿ ಒಂದಿಷ್ಟು ಗುಂಪುಗಳು ಮಾತಿಗಿಳಿದಿರುತ್ತವೆ ಎಷ್ಟೊಂದು ರಾದ್ಧಾಂತದ ಬದುಕು  ಪ್ರತಿಯೊಬ್ಬರು ಇನ್ನೊಬ್ಬರನ್ನು ದೂಷಿಸುವುದರಲ್ಲಿಯೇ ಮಗ್ನರಾಗಿದ್ದಾರೆ ಅಲ್ಲೊಂದು ಹಿರಿಯ ನಾಗರಿಕರಿಗೆ ಮೀಸಲಿಟ್ಟ ಆಸನದಲ್ಲಿ ಕುಳಿತ ಹುಡುಗರಿಗೆ ಕಾಲೇಜಿನ ಗೌಜು ಗದ್ದಲದ ಚಿಂತೆ ಅಲ್ಲೆ ಮುಂದೆ ಸೀಟು ಸಿಗದೆ ನಿಂತ ಮುದುಕನೊಬ್ಬ ಎಡಗಾಲನ್ನೊಮ್ಮೆ, ಬಲಗಾಲನ್ನೊಮ್ಮೆ ಬದಲಿಸುತ್ತ ದೇಹದ ಭಾರ ನಿಭಾಯಿಸುತ್ತಾನೆ ಅಜ್ಜನ ದೋತ್ರಕ್ಕೆ ಎಷ್ಟೊಂದು ನೆರಿಗೆಗಳು ಥೇಟ್ ಅವನ ಮುಖದ ಮೇಲಿನಂತೆ ಹಿಂದೆ ಯಾರದ್ದೊ ಮೊಬೈಲಿನಲಿ ಹಳೆ ಟ್ಯಾಕ್ಟರ್ ಜಾನಪದದ ಹಾಡು ಎಗ್ಗಿಲ್ಲದೆ ಬಡಿದುಕೊಳ್ಳುತ್ತಲೆ ಇದೆ ಚಿಲ್ಲರೆ ಕೇಳಿ ಕೇಳಿ ಸುಸ್ತಾದ ಕಂಡಕ್ಟರ್ ಕೂಡಾ ಸಾರ್ವಜನಿಕರಿಗೆ ಮನದಲ್ಲೆ ಬೈಯುತ್ತ ಟಿಕೆಟ್ ಹರಿಯುತ್ತಿದ್ದಾನೆ ಬಸ್ಸು ತಗ್ಗು ದಿಬ್ಬಿನ ರಸ್ತೆಯೊಡನೆ ಎಷ್ಟೊಂದು ಆತ್ಮೀಯವಾಗಿದೆ ಎದ್ದರೂ, ಬಿದ್ದರೂ ಮುಗ್ಗರಿಸದೆ ಮುನ್ನಡೆಯುತ್ತದೆ ಬಸ್ಸಿನ ಕಂಬಗಳೆಲ್ಲವೂ ಈಗ ಅನಾಥ ಎಲ್ಲರೂ ಮೊಬೈಲ್ ಹಿಡಿದು ಕುಳಿತವರೆ ನಾನು ಬಸ್ಸಿಗೆ ಹೊಸಬನೊ ಅಥವಾ ಬಸ್ಸು ನನಗೆ ಹೊಸದೊ, ಥೋ… ಗೊತ್ತಿಲ್ಲ ಒಂದೊಂದೆ ನಿಲ್ದಾಣ ಬಂದಂತೆಲ್ಲಾ ಬಸ್ಸು ಬರಿದಾಗತ್ತಲೆ ಇದೆ ಈಗೋ ಕಂಡಕ್ಟರ್ ನ ಅಂತಿಮ ಪ್ರಕಟಣೆ ‘ಲಾಸ್ಟ್ ಸ್ಟಾಪ್ ಯಾರ ನೋಡ್ರಿ ಇಳಕೊಳ್ಳೊರು ಇಳಕೊಳ್ರಿ’ 2. ದೇವರು ತುಂಬ ದೊಡ್ಡವನು ರಾಮನಾದರೂ ದಕ್ಕಲಿ, ರಹೀಮನಾದರೂ ದಕ್ಕಲಿ ಬಿಕ್ಕಿ ಅಳುವ ಕಂದನ , ಕಣ್ಣೀರು ಕೊಂಚ ಒರೆಸಲಿ ಬಣ್ಣದ ಬಾವುಟಗಳು ಒಂದಿಷ್ಟು ಶಾಂತವಾಗಲಿ ಬದುಕೆ ಇಲ್ಲದೆ ಕೊರಗುವವರಿಗೆ ಒಂದಿಷ್ಟು ರಂಗು ದೊರೆಯಲಿ ಧರ್ಮ ಶ್ರೇಷ್ಠತೆಯ ಬೊಬ್ಬೆಯಿಡು ನೀನು ನಾನು ಮಾತ್ರ ಹಸಿದವರಿಗೆ ಒಂದು ತುತ್ತು ಅಣ್ಣ ಕಲಸಿ, ಕೈತುತ್ತನ್ನಷ್ಟೆ ನೀಡಬಲ್ಲೆ ಅಲಿಸಾಬ್ ಕಾಕಾನೊಂದಿಗೆ ವ್ಯವಹಾರ ನಡೆಸುತ್ತಿದ್ದ ದೊಡ್ಡಪ್ಪ ಎಂದಿಗೂ ಧರ್ಮ-ಜಾತಿಗಳ ಲೆಕ್ಕ ಹಾಕಿದ್ದು ಕಂಡಿಲ್ಲ ಇಷ್ಟ್ಯಾಕೆ ಕಚ್ಚಾಡಿ, ಕಷ್ಟಪಡುತ್ತೀರಿ ದೇವರು ತುಂಬ ದೊಡ್ಡವನು ನಿವ್ಯಾಕೆ ಬೀದಿಗಿಳಿದು ಚಿಕ್ಕವರಾಗುತ್ತೀರಿ ಗೋಡೆಯಾದರೂ ಉರುಳಲಿ, ಗುಮ್ಮಟವಾದರೂ ಉರುಳಲಿ ಹಸಿವಿನ ಕಟ್ಟೆ ಒಡೆಯದಿರಲಿ ಕಟ್ಟುವುದೇ ಆದರೆ ಒಂದು ಶಾಲೆಯನ್ನೊ, ಶೌಚಗೃಹವನ್ನೊ ಕಟ್ಟೋಣ ಹಸಿವು, ಅಜ್ಞಾನ, ಮಾನದ ಮುಂದೆ ಯಾವ ದೇವರೂ ದೊಡ್ಡವನಲ್ಲ ಅಲ್ಲವೆ… 3. ಸಾವು ಅಂತಿಮ ಎನಿಸಿದಾಗ ನೀನೊಮ್ಮೆ ಪಾರಿಜಾತದ ಹೂ ನೋಡಬೇಕಿತ್ತು ಕೊಂಡಿ ಕಳಚಿದಾಗಲೂ ಅದು ನಗುತ್ತಲೆ ನೆಲಕ್ಕುದುರುವ ಪರಿ ಹೇಳುತ್ತಿತ್ತು ಸಾವು ಅಂತಿಮ ಎನಿಸಿದಾಗ ನೀನೊಮ್ಮೆ ನವಿಲು ಗರಿಯನ್ನ ಮಾತಿಗೆಳೆಯಬೇಕಿತ್ತು ಮೈ ಕೊಡವಿದಾಗ ದೇಹದಿಂದ ಬೇರ್ಪಟ್ಟರು ಅದು ನಗುವ ಪರಿ ಹೇಳುತ್ತಿತ್ತು ಸಾವು ಅಂತಿಮ ಎನಿಸಿದಾಗ ನೀನೊಮ್ಮೆ ಕಡಲ ಚಿಪ್ಪನ್ನು ಕಂಡು ಬರಬೇಕಿತ್ತು ತಲೆ ಒಡೆಸಿಕೊಂಡಾಗ ಮುತ್ತು ನೀಡಿದ ಘಳಿಗೆಯ ನೆನದು ಅದು ಸಾಂತ್ವನ ಹೇಳುತ್ತಿತ್ತು ಸಾವು ಅಂತಿಮ ಎನಿಸಿದಾಗ ನೀನೊಮ್ಮೆ ಹೆತ್ತವ್ವನ ಒಡಲಲ್ಲಿ ಸುಮ್ಮನೆ ತಲೆಯಿಟ್ಟು ಮಲಗಬೇಕಿತ್ತು ಕರುಳಬಳ್ಳಿ ಕತ್ತರಿಸಿ, ಕೋಡಿ ನೆತ್ತರ ಹರಿಸಿದಾಗಲೇ ನೀ ಹುಟ್ಟಿದ್ದನ್ನು ಕಿವಿ ಹಿಂಡಿ  ಹೇಳುತ್ತಿತ್ತು ಸಾವೇ ಅಂತಿಮ ಎನಿಸಿದಾಗ ನೀನೊಮ್ಮೆ ನಿನ್ನಾತ್ಮದೊಂದಿಗೆ ಸಂವಾದಕ್ಕಿಳಿಯಬೇಕಿತ್ತು ಕೊನೆ ಪಕ್ಷ ಇದ್ದು ಮಾಡಬೇಕಾದ ಜರೂರತ್ತುಗಳನ್ನ ನೆನಪಿಸುತ್ತಿತ್ತು ಸಾವು ಅಂತಿಮ ಎನಿಸಿದಾಗ ನೀನೊಮ್ಮೆ ಮೌನ ಮುರಿದು ಮಾತಾಗಬೇಕಿತ್ತು ನಾನು ಹೆಗಲುಕೊಟ್ಟು ದುಃಖಕ್ಕೆ ಜೊತೆಯಾಗುತ್ತಿದ್ದೆ ನೀ ಇದ್ದರೂ, ಇಲ್ಲದಿದ್ದರೂ ಇಲ್ಲಿ ಯಾವುದು ನಿಲ್ಲುವುದಿಲ್ಲ ಈಗ ಎಲ್ಲವೂ ಮೀರಿ ಹೋಗಿದೆ ಅಷ್ಟೆ ನಿನ್ನ ಬಿತ್ತಿದ ನೆಲವೂ ಉಬ್ಬಿ ನಿಂತಿದೆ ಹೂಗಳ ಹೊತ್ತು ಸನ್ಮಾನವೆಂದು ಭ್ರಮಿಸಿ ನೀನಷ್ಟೆ ಕುಗ್ಗಿ ಮಣ್ಣಾಗಿ ಹೋದವ ಮೂರ್ಖ 4. ಜಿನುಗುವ ಮಳೆಯಲ್ಲಿ ಬಿಕ್ಕುವ ಹಳೆ ನೆನಪುಗಳ ಕೆಣಕಬೇಡ ಸಖಿ ಸುಕ್ಕುಗಟ್ಟಿದ ಮನಸ್ಸಲ್ಲಿ ಮತ್ತೆ ಮುಂಗಾರು ಮಳೆ ಸುರಿದು ಒಲವ ಹೂ

Read Post »

ಕಾವ್ಯಯಾನ

ದ್ವೇಷ

ಅನುವಾದಿತ ಕವಿತೆ ದ್ವೇಷ ಇಂಗ್ಲೀಷ್ ಮೂಲ: ಸ್ಟೀಫನ್ಸ್ ಕನ್ನಡಕ್ಕೆ: ವಿ.ಗಣೇಶ್ ಕಗ್ಗತ್ತಲ ಆ ಕರಾಳ ರಾತ್ರಿಯಲಿ ಬಂದುಎದುರಿಗೆ ನಿಂತ ಆ ನನ್ನ ಕಡುವೈರಿದುರುದುರುಗುಟ್ಟಿ ನನ್ನ ನೋಡುತ್ತಿದ್ದಾಗತುಟಿಯದುರುತ್ತಿತ್ತು, ತನು ನಡುಗುತ್ತಿತ್ತು. ಹರಿದು ತಿನ್ನುವ ತೆರದಿ ವೈರಿಯ ನೋಡುತದೂರ್ವಾಸನಂತೆ ಉರಿಗಣ್ಣು ಬಿಟ್ಟಾಗನನ್ನ ಎರಡು ಕಣ್ಣುಗಳು ಕಾದ ಕಬ್ಬಿಣದಂತೆಕೆಂಪಾಗಿ ಕೆಂಡ ಕಾರುತ್ತಾ ಉರಿಯುತ್ತಲಿದ್ದವು ಶಾಂತಿಸಹನೆಯ ಮೂರ್ತಿಯಾದ ನನ್ನ ವೈರಿನಸುನಗುತ “ಗೆಳೆಯಾ, ಏಕಿಷ್ಟು ಉಗ್ರನಾಗಿರುವೆ?ಬಾಲ್ಯದಿಂದಲೂ ಕೂಡಿ ಕಳೆದ ಆ ಸಿಹಿ ದಿನಗಳನ್ನುಅದಾಗಲೇ ಮರೆತುಬಿಟ್ಟೆಯಾ?” ಎನ್ನ ಬೇಕೇ? “ಏನೋ ನಡೆಯ ಬಾರದ ಕಹಿ ಘಟನೆ ನಡೆದುನಮ್ಮಿಬ್ಬರ ಹಾದಿಯಲ್ಲಿ ಒಡಕಾದ ಮಾತ್ರಕ್ಕೆನಮ್ಮಿಬ್ಬರ ಪ್ರೀತಿಯ ತೊರೆ ಬತ್ತಿ ಬರಡಾಗಿಬದುಕು ಇಲ್ಲಿಗೇ ಮುಗಿದು ಹೋಯಿತೆನ್ನುವೆಯಾ?” “ನಿನ್ನ ಬತ್ತಳಿಕೆಯ ವಿಷಪೂರಿತ ಮೊನಚಾದಬಾಣಗಳೆಲ್ಲಾ ಬರಿದಾದಾಗ, ‘ನಾವೇಕೆ ಹೀಗೆದ್ವೇಷಿಸುತ್ತಿದ್ದೆವು?’ ಎಂಬುದಕ್ಕೆ ಉತ್ತರಿಸಬಲ್ಲೆಯಾ?ಅರ್ಥವಿಲ್ಲದ ಈ ದ್ವೇಷಕ್ಕೆ ಕೊನೆಯಿಲ್ಲವೇ?” ಎಂದಾಗ ಆ ವೈರಿಯ ಮುಂದೆ ತುಂಬಾ ಚಿಕ್ಕವನಾಗಿಮಾತೇ ಹೊರಡದೆ ಮೂಕನಾಗಿಬಿಟ್ಟೆತಗ್ಗಿಸಿದ ತಲೆಯನಾಗ ಮೇಲೆತ್ತಲಾರದೇಅದಾಗಲೇ ತಣ್ಣಗಾಗಿ ಕುಸಿಯ ತೊಡಗಿದೆ ಪ್ರೀತಿಯ ಸಿಹಿ ಕೋಪದ ಕಹಿಯ ಕರಗಿಸಿದಾಗನಾಚಿ ನೀರಾಗುತ್ತ ಅವನತ್ತ ನೋಡಿದೆನಮ್ಮಿಬ್ಬರ ದೃಷ್ಟಿ ಮತ್ತೆ ಕಲೆತಾಗ, ಬಾಲ್ಯದನೆನಪು ಮನದಾಳದಿಂದ ಚಿಮ್ಮತೊಡಗಿತು ಆಗ ನಾನೇನು ಹೇಳುವೆನೋ ಎಂದು ಕಾತರದಿನನ್ನೆಡೆಗೆ ನೋಡುತ್ತಿದ್ದವನ ಎದುರಿಸಲಾಗದೇಎಲ್ಲಿ ಹಿಡಿದು ಮುತ್ತಿಡುವೆನೋ ಏನೋ ಎಂದುಮುಖನೋಡಲಾಗದೇ ಹಾಗೇ ಒಳಕ್ಕೆ ಓಡಿದೆ. ಬಾಡಿ ಮುದುಡಿದ ಗೆಳೆತನದ ಸಸಿ ಅಂದುಚಿಗುರೊಡೆದು ಹಸಿರಾಗಿ ಬೆಳೆಯತೊಡಗಿದಾಗನನ್ನ ಕೋಪದ ಬಂಡೆ ಅದಾಗಲೇ ಕರಗಿ ನೀರಾಗಿಚಿಗುರುತಿಹ ಆ ಸಸಿಗೆ ನೀರೆರೆಯತೊಡಗಿತ್ತು. ********************************

ದ್ವೇಷ Read Post »

ಇತರೆ

ಕನ್ನಡ ಸಾಹಿತ್ಯ, ಸಾಹಿತ್ಯ ಪರಿಷತ್ತು ಮತ್ತು ಮಹಿಳೆ..!

ಲೇಖನ ಕನ್ನಡ ಸಾಹಿತ್ಯ, ಸಾಹಿತ್ಯ ಪರಿಷತ್ತು ಮತ್ತು ಮಹಿಳೆ..! ಮಹಿಳೆಯೊಬ್ಬರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಬೇಕು ಎಂಬ ಚರ್ಚೆಗೆ ಜೀವ ಬಂದಿದೆ. ಶತಮಾನ ಪೂರೈಸಿರುವ ಈ ಸಂಸ್ಥೆಯು ಇದುವರೆಗೆ ಮಹಿಳಾ ಅಧ್ಯಕ್ಷರನ್ನು ಕಂಡಿಲ್ಲ. ಅಧಿಕಾರ-ಹಣ-ವರ್ಚಸ್ಸು ಇರುವ ಕ.ಸಾ.ಪ,ದಲ್ಲಿ ಚುನಾವಣೆಯ ಬಲಾಬಲ ಪರೀಕ್ಷೆಯಲ್ಲಿ ಮಹಿಳೆಯರು ಕಾಣಿಸಿಕೊಳ್ಳಬಹುದೇ? ಅಂತಹ ಅವಕಾಶವನ್ನು ’ಮತ’ ಚಲಾಯಿಸುವ ಸದಸ್ಯರು ಒಪ್ಪಿಕೊಳ್ಳುವರೇ? ಎಂದು ಕೇಳಿರುವ ಪತ್ರಕರ್ತವೊಬ್ಬರು ಚರ್ಚೆಯನ್ನು ಆರಂಭಿಸಿದ್ದಾರೆ. ನೂರೈದು ವರ್ಷ ಪೂರೈಸಿರುವ ಕನ್ನಡ ಸಾಹಿತ್ಯ ಪರಿಷತ್ತು ಕಳೆದ ಕೆಲ ವರುಷಗಳಿಂದ ಒಳ್ಳೆಯ ಕಾರಣಕ್ಕಾಗಿ ಸುದ್ದಿಯಾದದ್ದು ಇಲ್ಲವೇ ಇಲ್ಲ ಎನ್ನುವಷ್ಟು ಕಡಿಮೆ. ’ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ’ ಎಂದು ಗುರುತಿಸಲಾಗುವ ಈ ಸಂಸ್ಥೆ ಹಾಗೆ ನಡೆದು ಕೊಂಡದ್ದು ಮಾತ್ರ ಅಪರೂಪದಲ್ಲಿ ಅಪರೂಪ. ಚಾರಿತ್ರಿಕ ಮಹತ್ವದ ಈ ಸಂಸ್ಥೆಯ ಆಡಳಿತ ಚುಕ್ಕಾಣಿ ಹಿಡಿದವರು ಇತ್ತೀಚಿನ ದಿನಗಳಲ್ಲಿ ಅದರ ಘನತೆಗೆ ತಕ್ಕಂತೆ ವರ್ತಿಸದೇ ಇರುವದಕ್ಕೂ ಸಾಕ್ಷಿಯಾಯಿತು. ಜಾತಿ ರಾಜಕಾರಣ, ಸ್ವಜನ ಪಕ್ಷಪಾತ, ಅಧಿಕಾರ ಲೋಲುಪತೆ ಸೇರಿದಂತೆ ಸಕ್ರಿಯರಾಗಿ ರಾಜಕಾರಣದ ಎಲ್ಲ ರೋಗಗಳನ್ನೂ ಹೊಂದಿದೆ. ನಿಂತ ನೀರಾಗಿರುವುದರ ಜೊತೆಗೆ ಮಲೆತು ವಾಸನೆ ಬರುವ ಹಂತ ತಲುಪಿರುವ ಸಾಹಿತ್ಯ ಪರಿಷತ್ತು ಕಾಯಕಲ್ಪಕ್ಕಾಗಿ ಕಾಯುತ್ತ ನಿಂತಿದೆ. ಅಧಿಕಾರ-ಹಣಗಳೆರಡೂ ಒಂದೆಡೆಯೇ ಸೇರಿದ ಮೇಲೆ ಅದರ ಜೊತೆಗೆ ರಾಜಕಾರಣ ಕೂಡ ಸಹಜವಾಗಿಯೇ ಬಂದು ನಿಲ್ಲುತ್ತವೆ. ತೋಳ್ಬಲ-ಸಂಖ್ಯಾಬಲಗಳೇ ಬಹುಮುಖ್ಯವಾದ ಮೇಲೆ ಆ ಮೂಲಕ ಆಯ್ಕೆಯಾಗಿ ಬಂದವರಿಂದ ಶಿಸ್ತು, ಸೌಜನ್ಯ, ಮೌಲ್ಯ, ಪ್ರಾಮಾಣಿಕತೆ ನಿರೀಕ್ಷಿಸುವುದು ದುರಾಸೆಯಾದೀತು. ಇಂತಿಪ್ಪ ಈ ಸಾಹಿತ್ಯ ಪರಿಷತ್ತಿನ ಗದ್ದುಗೆಯಲ್ಲಿ ಕುಳಿತವರು ಮೂರನ್ನೂ ಬಿಡದೇ ಇದ್ದಿದ್ದರೆ ಈ ಹಿಂದೆ ಚುನಾವಣೆ ನಡೆದು ಎರಡು ವರ್ಷ ಕಳೆಯಬೇಕಿತ್ತು. ಸಾಹಿತ್ಯಲೋಕದ ಒಬ್ಬ ಪ್ರತಿನಿಧಿಯಂತೆ ವರ್ತಿಸದೇ ದುರಾಸೆಯಿಂದ ಬೈಲಾ ತಿದ್ದುಪಡಿ ಅದನ್ನು ತನ್ನ ಅವಧಿಗೇ ಅಳವಡಿಸಿಕೊಂಡು-ವಿಸ್ತರಿಸಿಕೊಂಡ ನಾಚಿಕೆಗೇಡಿನ ಸಂಗತಿಗೂ ಕಸಾಪ ಸಾಕ್ಷಿಯಾಯಿತು. ಸಾಹಿತ್ಯ ಪರಿಷತ್ತಿಗೆ ’ಕಪ್ಪುಚುಕ್ಕೆ’ ಬಳಿಯಲೂ ಕಾರಣವಾಯಿತು. ಈ ಹಿಂದೆಯೂ ಬೈಲಾ ತಿದ್ದುಪಡಿಯ ಚರ್ಚೆ ನಡೆದಿತ್ತು. ಆದರೆ ಅದಕ್ಕೆ ತೀವ್ರ ಪ್ರತಿರೋಧ ವ್ಯಕ್ತವಾಗಿತ್ತು. ಆಗ ಅಧ್ಯಕ್ಷರಾಗಿದ್ದವರು ಮೂರನ್ನೂ ಬಿಡುವಷ್ಟು ಧೈರ್ಯವಂತರಾಗಿರಲಿಲ್ಲ. ಕನಿಷ್ಠ ಮಟ್ಟದ ಸ್ವಪ್ರಜ್ಞೆಯ ಜೊತೆಗೆ ಪರಿಷತ್ತಿನ ಘನತೆಯೂ ಅವರನ್ನು ತಮಗೆ ಬೇಕಾದಂತೆ ಮಾಡದೇ ಇರುವಂತೆ ತಡೆದಿತ್ತು. ಜೀವ ವಿರೋಧಿ- ಜನವಿರೋಧಿ ನಡೆ ನಡೆದುಕೊಳ್ಳಲೂ ಹಿಂದೇಟು ಹಾಕದ ಸ್ಥಿತಿಗೆ ಸಾಹಿತ್ಯ ಪರಿಷತ್ತು ತಲುಪಿದೆ. ಅದು ನಡೆಸುವ ವಾರ್ಷಿಕ ಕ್ರಿಯಾವಿಧಿಯ ಸಾಹಿತ್ಯ ಸಮ್ಮೇಳನದಲ್ಲಿಯೇ ಪರಿಷತ್ತಿನ ಅಧ್ಯಕ್ಷರ ನಡವಳಿಕೆ ಬಗ್ಗೆ ಬಹಿರಂಗ ಪ್ರತಿರೋಧವೂ ವ್ಯಕ್ತವಾಯಿತು. ತೋಯ್ದ ಮುಖ ನನ್ನದಲ್ಲ ಎಂದು ಒರೆಸಿಕೊಂಡದ್ದನ್ನೂ ಕನ್ನಡ ಜನತೆ ನೋಡಬೇಕಾಯಿತು. ಇಂತಹ ಘನ ಇತಿಹಾಸ-ಪರಂಪರೆ ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತಿಗೆ ಮಹಿಳೆಯೊಬ್ಬರು ಅಧ್ಯಕ್ಷರಾದರೆ? ಎಂಬ ಪ್ರಶ್ನೆ ತೇಲಿಬಂದಿತು ಆಗಲೇ. ತೇಲಿ ಬಂದ ಮಾತು ಚರ್ಚೆ- ಸಂವಾದಕ್ಕೂ ಕಾರಣವಾಗಿಯಿತು. ಅಪರೂಪಕ್ಕೆ ಪರಿಷತ್ತು ಧನಾತ್ಮಕ ಕಾರಣಕ್ಕಾಗಿ ಚರ್ಚೆಗೆ ಒಳಗಾಗಿದೆ. ಅಥವಾ ಪರಿಷತ್ತಿನ ಬಗ್ಗೆ ಕಾಳಜಿ ಇರುವವರು ಧನಾತ್ಮಕ ನೆಲೆಯಲ್ಲಿ ಚರ್ಚೆ ಹುಟ್ಟು ಹಾಕಿದ್ದಾರೆ. ಅದರ ಫಲ-ಫಲಿತ ಧನಾತ್ಮಕವಾಗಿಯೇ ಇರಬೇಕು ಎಂದೇನಿಲ್ಲ. ಅಲ್ಲವೇ? ಸಾಹಿತ್ಯ ಪರಿಷತ್ತು ಘನತೆಯಿಂದ ವರ್ತಿಸಿದ್ದನ್ನೂ ನೋಡಿ ದೀರ್ಘ ಕಾಲವಾಗಿದೆ. 1905 ರಲ್ಲಿ ಆರಂಭವಾದ ಕನ್ನಡ ಸಾಹಿತ್ಯ ಪರಿಷತ್ತು ಪ್ರತಿ ವರ್ಷ ವಾರ್ಷಿಕ ಸಮ್ಮೇಳನ ನಡೆಸುವ ಪರಿಪಾಠ ಇಟ್ಟುಕೊಂಡಿದೆ. ಆರಂಭದ ದಿನಗಳಲ್ಲಿ ಪರಿಷತ್ತಿನ ಅಧ್ಯಕ್ಷರೇ ಸಮ್ಮೇಳನದ ಅಧ್ಯಕ್ಷತೆಯನ್ನೂ ವಹಿಸುತ್ತಿದ್ದರು. ಕೆಲವರ್ಷಗಳ ನಂತರ ಈ ಪರಿಪಾಠ ಬದಲಾಯಿಸಿ, ಕನ್ನಡ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ ಸಾಹಿತಿ-ಲೇಖಕರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡುವ ಪ್ರಕ್ರಿಯೆ ಜಾರಿಗೆ ಬಂತು. ಕಳೆದ ನೂರೈದು ವರ್ಷಗಳಲ್ಲಿ ಸಾಹಿತ್ಯ ಪರಿಷತ್ತು ಇದುವರೆಗೆ 85 ರ ಮೇಲೆ ಸಮ್ಮೇಳನಗಳನ್ನು ನಡೆಸಿದೆ. ಮತ್ತು ನಡೆಸುತ್ತದೆ. ಈ ಸಮ್ಮೇಳನ ಅಧ್ಯಕ್ಷರ ಪಟ್ಟಿ ಮೇಲೆ ಕಣ್ಣು ಹಾಯಿಸಿದರೆ ಪರಿಷತ್ತಿನ ಪುರುಷ ಪ್ರಧಾನ ’ಮ್ಯಾಚೋ’ ಗುಣ ಢಾಳಾಗಿ ಎದ್ದು ಕಾಣುತ್ತದೆ. ಅಪರೂಪಕ್ಕೆ ಆಗಾಗ ಅಂದರೆ ಬೆರಳೆಣಿಕೆಗಿಂತ ಕಡಿಮೆ ಸಲ ಪರಿಷತ್ತು ತನ್ನದೇ ರೂಢಿಯನ್ನು ಮುರಿಯುವ ಧೈರ್ಯವನ್ನೂ ಮಾಡಿದೆ. ಉತ್ತರದ ಗಡಿಭಾಗದಲ್ಲಿ ಕನ್ನಡದ ಕೆಲಸ ಮಾಡಿದ ಲೇಖಕಿ, ಕನ್ನಡಕ್ಕಾಗಿ ಸಿಂಹಿಣಿಯಂತೆ ಹೋರಾಟ ಮಾಡುತ್ತಿದ್ದ ಜಯದೇವಿ ತಾಯಿ ಲಿಗಾಡೆ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿತ್ತು. ಅಪ್ಪಟ ಕನ್ನಡದ ನೆಲ ಸಿದ್ಧರಾಮನ ಸೊನ್ನಲಿಗೆಯವರಾದ ತಾಯಿ ಲಿಗಾಡೆ ಅವರು ಏಕೀಕರಣ ಮತ್ತು ನಂತರದ ದಿನಗಳಲ್ಲಿ ನಡೆದ ಹೋರಾಟಗಳಲ್ಲಿ ಸಕ್ರಿಯರಾಗಿದ್ದವರು. ತಾಯಿಯ ಪದಗಳು, ಸಿದ್ಧರಾಮ ಪುರಾಣದಂತಹ ಗಮನಾರ್ಹ ಕೃತಿ ರಚಿಸಿದ ಜಯದೇವಿ ಅವರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯ ಗೌರವಕ್ಕೆ ಪಾತ್ರರಾಗಿದ್ದರು. ಮಂಡ್ಯದಲ್ಲಿ (1972) ದಲ್ಲಿ ನಡೆದ 48 ನೇ ಸಾಹಿತ್ಯ ಸಮ್ಮೇಳನಕ್ಕೆ ಜಯದೇವಿ ತಾಯಿ ಲಿಗಾಡೆ ಅವರು ಅಧ್ಯಕ್ಷರಾಗಿದ್ದರು. ಅದಾದ ಮೇಲೆ ಮತ್ತೊಮ್ಮೆ ಮಹಿಳೆಯೊಬ್ಬರಿಗೆ ಸಮ್ಮೇಳನದ ಅಧ್ಯಕ್ಷತೆಯ ಗೌರವ ದೊರೆತದ್ದು 1999 ರಲ್ಲಿ. ಬಾಗಲಕೋಟೆಯಲ್ಲಿ ನಡೆದ ಸಮ್ಮೇಳನದ ಅಧ್ಯಕ್ಷತೆಗೆ ಹಿರಿಯ ಲೇಖಕಿ ಶಾಂತಾದೇವಿ ಮಾಳವಾಡ ಅವರನ್ನು ಆಯ್ಕೆ ಮಾಡಲಾಗಿತ್ತು. ಅದಾದ ಮೇಲೆ 2003 ರಲ್ಲಿ ಮೂಡಬಿದರೆಯಲ್ಲಿ ನಡೆದ 71ನೇ ಸಾಹಿತ್ಯ ಸಮ್ಮೇಳನಕ್ಕೆ ಡಾ.ಕಮಲಾ ಹಂಪನಾ ಆಯ್ಕೆಯಾಗಿದ್ದರು. ಅದಲ್ಲದೇ ಗದಗದಲ್ಲಿ ನಡೆದ ಸಮ್ಮೇಳನದ ಅಧ್ಯಕ್ಷೆಯನ್ನಾಗಿ ಗೀತಾ ನಾಗಭೂಷಣ ಆಯ್ಕೆಯಾಗಿದ್ದರು. ಈ ನಾಲ್ಕು ಅಪರೂಪದ ಅಪವಾದಗಳನ್ನು ಹೊರತು ಪಡಿಸಿದರೆ ಪರಿಷತ್ತು ಅಂದರೆ ಅದರ ಅಧಿಕಾರದ ಚುಕ್ಕಾಣಿ ಹಿಡಿದವರು-ಪದಾಧಿಕಾರಿಗಳು ಅರ್ಧದಷ್ಟು ಕನ್ನಡಿಗರಿರುವ ಮಹಿಳೆಯರನ್ನು ಗಂಭೀರವಾಗಿ ಪರಿಗಣಿಸಿದ್ದೇ ಇಲ್ಲ. ಹಾಗೆಂದರೆ ಅದು ಪೂರ್ಣ ಸತ್ಯ ಅಲ್ಲ ಎಂದು ವಾದಿಸಬಹುದು. ಕಾರ್ಯಕಾರಿ ಮಂಡಳಿಯಲ್ಲಿ ’ಮಹಿಳಾ ಪ್ರತಿನಿಧಿ’ಯ ನೇಮಕ ಮತ್ತು ಮಹಿಳಾ ಸಾಹಿತ್ಯದ ಕುರಿತ ಚರ್ಚೆ-ಸಂವಾದ-ಗೋಷ್ಠಿ ನಡೆಸುವ ಔದಾರ್ಯವನ್ನು ಪರಿಷತ್ತು ತೋರಿಸುತ್ತಲೇ ಬಂದಿಲ್ಲ. ಇಂತಹ ಪುರುಷ ಪ್ರಧಾನ, ಯಜಮಾನಿಕೆಯನ್ನು ಹೊಂದಿರುವ ಕನ್ನಡದ- ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯ ಚುಕ್ಕಾಣಿ ಮಹಿಳೆಯೊಬ್ಬರಿಗೆ ಯಾಕೆ ಸಿಗಬಾರದು? ಎಂಬ ಪ್ರಶ್ನೆ ಸಕಾರಣ ಮತ್ತು ಸಕಾಲಿಕ. ಆದರೆ, ಪ್ರಶ್ನೆ ಇರುವಷ್ಟು ಸುಲಭವಾಗಿ ಉತ್ತರ ಇರುವುದಿಲ್ಲ. ಉತ್ತರ-ದಕ್ಷಿಣ, ಪ್ರಬಲ ಸಮುದಾಯಗಳ ಹಿಡಿತದಲ್ಲಿ ಇರುವ ಹಣ ಮತ್ತು ಅಧಿಕಾರ ಇರುವ ಈ ಸ್ಥಾನ ಮಹಿಳೆಗೆ ಸಿಗಬಹುದೇ? ಎಂದು ಯೋಚಿಸಿದರೆ ’ಬೆಳಕಿನ ಕಿರಣ’ ಪರಿಷತ್ತಿನ ಸುತ್ತೆಲ್ಲೂ ಕಾಣಿಸುವುದಿಲ್ಲ. ಒಂದು ಲಕ್ಷಕ್ಕೂ ಹೆಚ್ಚು ಜನ ಸದಸ್ಯರನ್ನು ಹೊಂದಿರುವ ಪರಿಷತ್ತು ಚುನಾವಣಾ ರಾಜಕಾರಣದ ಅಖಾಡವಾಗಿದೆ. ತೋಳ್ಬಲ-ಧನಬಲ-ಜಾತಿಬಲ ಇಲ್ಲದವರಾರೂ ಪರಿಷತ್ತಿನ ಸುತ್ತ ಸುಳಿಯುವ ಹಾಗಿಲ್ಲ. ಅಧ್ಯಕ್ಷರಾಗಲು ಅರ್ಹ ಮಹಿಳೆಯರಿಲ್ಲವೇ? ಈಗ ಪರಿಷತ್ತಿನ ಅಧ್ಯಕ್ಷರಾಗಲು ಬೇಕಿರುವುದು ಸಾಹಿತ್ಯ ರಚನೆ, ಸಾಹಿತ್ಯದ ಒಡನಾಟ, ಸಾಹಿತ್ಯಾಸಕ್ತಿ, ಆಡಳಿತದ ಅನುಭವ ಯಾವುದೂ ಮುಖ್ಯವಲ್ಲ. ಇಂತಿಪ್ಪ ಸಕಾರಣ ಕಾರಣಗಳ ಅಗತ್ಯವೇ ಇಲ್ಲದ ಅಧ್ಯಕ್ಷ ಹುದ್ದೆಯು ಮಹಿಳೆಯರಿಗೆ ಪೈಪೋಟಿಯಾಚೆಗಿನ ಸಂಗತಿ ಎಂಬಂತೆ ಗೋಚರವಾಗುತ್ತಿದೆ. ಮಹಿಳೆಯರಿಗೆ ಅಧಿಕಾರ ’ನೀಡುವ’? ಔದಾರ್ಯ ಪರಿಷತ್ತಿನ ಸದಸ್ಯರು ತೋರಬಹುದೇ? ಚುನಾವಣೆಯಲ್ಲಿ ಇಬ್ಬರು ಮಹಿಳೆಯರು ನಿಂತರೆ ಅಥವಾ ಅವಿರೋಧ ಆಯ್ಕೆಯಾದರೆ ಮಾತ್ರ ಪರಿಷತ್ತು ಮಹಿಳಾ ಅಧ್ಯಕ್ಷೆಯನ್ನು ಕಾಣಬಹುದು. ಅದಿಲ್ಲದಿದ್ದರೆ ತೋಳ್ಬಲದ ಪೈಪೋಟಿಗೆ ಇಳಿದು ಮಹಿಳೆಯೊಬ್ಬರು ಅಧ್ಯಕ್ಷರಾಗುವುದು ಕಷ್ಟಸಾಧ್ಯದ ಸಂಗತಿ ಎಂದೇ ತೋರುತ್ತದೆ. ಈಗಿನ ದಿನಮಾನದಲ್ಲಿ ಚುನಾವಣೆ ನಡೆಯುವ ಹುದ್ದೆಗಳಿಗೆ ಅವಿರೋಧ ಆಯ್ಕೆ ನಿರೀಕ್ಷಿಸುವುದು ಅಸಾಧ್ಯವಾದ ಸಂಗತಿ. ಹೀಗಿರುವಾಗ ಉಳಿಯುವ ಒಂದೇ ಆಯ್ಕೆ ಎಂದರೆ ಇಬ್ಬರು ಮಹಿಳೆಯರನ್ನು ಚುನಾವಣೆಯ ಕಣಕ್ಕೆ ಇಳಿಸುವುದು ಅಥವಾ ಮಹಿಳೆಯರಿಬ್ಬರು ಚುನಾವಣೆಗೆ ಸ್ಪರ್ಧಿಸುವುದು. ಸಾರ್ವಜನಿಕ ಹುದ್ದೆಗಳಲ್ಲಿ ಅಂದರೆ ಅಧಿಕಾರ ನಡೆಸಿದ ಅನುಭವ, ಸಾಹಿತ್ಯದ ಆಸಕ್ತಿ, ಬರವಣಿಗೆಯಲ್ಲಿ ಆಸಕ್ತಿ ಇರುವ ಕೆಲವು ಮಹಿಳೆಯರು ಪರಿಷತ್ತಿನ ಅಧ್ಯಕ್ಷತೆ ವಹಿಸುವುದು ಸೂಕ್ತ ಎಂಬ ಅಭಿಪ್ರಾಯ ನನ್ನದು. ಹಿರಿಯ ಕಾದಂಬರಿಕಾರ್ತಿ-ಲೇಖಕಿ ವೀಣಾ ಶಾಂತೇಶ್ವರ ಅವರು ಧಾರವಾಡದ ಕರ್ನಾಟಕ ಕಾಲೇಜಿನ ಪ್ರಾಂಶುಪಾಲರಾಗಿದ್ದವರು. ಇಂಗ್ಲಿಷ್‌ ಸಾಹಿತ್ಯದ ಅಧ್ಯಾಪಕಿಯಾಗಿದ್ದ ವೀಣಾ ಶಾಂತೇಶ್ವರ ಅವರು ಕನ್ನಡದಲ್ಲಿ ಗಮನಾರ್ಹ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ವೀಣಾ ಶಾಂತೇಶ್ವರ ಅವರ ಅಧ್ಯಕ್ಷರಾದರೆ ತಪ್ಪೇನು? ಸ್ವದೇಶಿ ಹೆಲಿಕ್ಯಾಪ್ಟರ್‌ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದ ವಿಜ್ಞಾನ ಲೇಖಕಿ-ಕತೆಗಾರ್ತಿ ನೇಮಿಚಂದ್ರ, ಕನ್ನಡ ಪತ್ರಿಕೋದ್ಯಮದಲ್ಲಿ ನಾಲ್ಕು ದಶಕಗಳ ಕಾರ್ಯನಿರ್ವಹಿಸಿದ, ಪತ್ರಿಕೆಯೊಂದರ ಸಂಪಾದಕರೂ ಆಗಿದ್ದ ಆರ್‌.ಪೂರ್ಣಿಮಾ, ಮಾತು-ಚಟುವಟಿಕೆ ಹಾಗೂ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕೆ.ನೀಲಾ, ತಮ್ಮ ಸೊಗಸಾದ ಕವಿತೆಗಳ ಮೂಲಕ ಗಮನ ಸೆಳೆದಿರುವ ಸವಿತಾ.ನಾಗಭೂಷಣ, ವಿಮರ್ಶಕಿಯಾಗಿ ಚಿರಪರಿಚಿತರಿರುವ ಎಂ.ಎಸ್‌.ಆಶಾದೇವಿ… ಹೀಗೆಯೇ ಪಟ್ಟಿಯನ್ನು ಬೆಳೆಸಬಹುದು. ಪರಿಷತ್ತಿನ ಚುನಾವಣೆಯು ಇಂತಹ ’ಹೊಸ’ ಆಲೋಚನೆಗೆ ಇಂಬು ನೀಡುವಷ್ಟು ಪ್ರಗತಿಪರವಾಗಿದೆಯೇ ಎಂಬ ಪ್ರಶ್ನೆಗೆ ಕಾಲವೇ ಉತ್ತರ ನೀಡಲಿದೆ. ಮತ್ತು ನೀಡಬೇಕು..! ************************************* ಕೆ.ಶಿವು.ಲಕ್ಕಣ್ಣವರ

ಕನ್ನಡ ಸಾಹಿತ್ಯ, ಸಾಹಿತ್ಯ ಪರಿಷತ್ತು ಮತ್ತು ಮಹಿಳೆ..! Read Post »

ಇತರೆ, ಲಹರಿ

ಏಕೀ ಏಕತಾನತೆ

ಲಹರಿ ಏಕೀ ಏಕತಾನತೆ ಸ್ಮಿತಾ ಭಟ್ ಅಮ್ಮಾ ನಿಂಗೆ ಇತ್ತೀಚಿಗೆ ಫಲಾವ್ ಮಾಡೋಕೆ ಬರಲ್ಲ ಎಂದು ಊಟಕ್ಕೆ ಕುಳಿತವ ಅಸಾಧ್ಯವಾದ ಅಸಮಾಧಾನ ತೋರಿಸಿ ಎರಡು ತುತ್ತು ತಿಂದ ಶಾಸ್ತ್ರ ಮಾಡಿ ಗೊಣಗುತ್ತಾ ಎದ್ದು ಹೊರಟೇ ಹೋದ. ನನಗೋ ಅಳುವೇ ತುಟಿಗೆ ಬಂದ ಅನುಭವ. ಮಾತು ಮಾತಿಗೂ ಅಮ್ಮನ ಫಲಾವ್ ಅಂದ್ರೆ ಅದೆಷ್ಟು ರುಚಿ, ಯಾರಿಗೂ ಈತರ ಮಾಡೋಕೆ ಬರಲ್ಲ ಎಂದು ಯಾರದ್ದಾದರೂ ಮನೆಯಲ್ಲಿ, ಹೋಟೆಲ್‌ ಗಳಲ್ಲಿ , ತಿಂದು ಬಂದಾಗೆಲ್ಲ ಪಲಾವ್ ನ ಗುಣ ಸ್ವಭಾವ ದೂರುತ್ತ ನನಗೆ ಕೊಟ್ಟ ಸರ್ಟಿಫಿಕೇಟ್ ನ ಲೆಕ್ಕವೇ ಇಲ್ಲ. ಇದೇನು ಇದ್ದಕ್ಕಿದ್ದಂತೆ ಈ ಪರಿ ಬದಲಾವಣೆ!? ನಿರಿಕ್ಷೆಗೂ ಮೀರಿದ ಪ್ರತಿಕ್ರಿಯೆ ಅಡುಗೆಯೆಂಬ ಅರಮನೆಯಲ್ಲಿ ನನ್ನ ಜಂಗಾಬಲವೇ ಉಡುಗಿಹೋಗಿತ್ತು. ಎದ್ದು ಹೊರಟವನ ಹಿಂದಿಂದೇ ಹೋಗಿ ಯಾಕೋ ಏನಾಯ್ತು ಹೇಳು. ಮತ್ತೆ ಇಷ್ಟು ದಿನ ಬಾಯಿ ಚಪ್ಪರಿಸಿ ಚಪ್ಪರಿಸಿ ತಿಂತಾ ಇದ್ದೆ ಈಗೆನಾಯ್ತು ಅಂತದ್ದು. ಸೋತ ಭಾವದೊಳಗೆ ಅವನ ಪರಿ ಪರಿಯಾಗಿ ಕೇಳುತ್ತಿದ್ದೆ. ಅದು ಆವಾಗ ಆಗಿತ್ತು,ಈಗ ಅಲ್ಲ. ಈಗಂತೂ ನಿನ್ನ ಫಲಾವ್ ಯಾಕೋ ಮೊದಲಿನ ರುಚಿ ಬರೋದೇ ಇಲ್ಲ. ಮರೆತೇ ಹೋಗಿದೆ ಅಮ್ಮಾ ನಿಂಗೆ ಆವತ್ತಿನ ರುಚಿ ಎನ್ನುತ್ತ, ಯಾವ ಪ್ರತಿಕ್ರಿಯೆಗೂ ಕಾಯದೇ ಹೊರಟೇ ಹೋಗಿದ್ದ. ಮನೆಯ ಎಲ್ಲ ಸದಸ್ಯರಿಂದ ಇಂತಹದ್ದೊಂದು ತಕರಾರು ಸದಾ ಸ್ವೀಕರಿಸುವ ನನಗೆ,ರೂಡಿಯಾದ ವಿಚಾರವೇ ಆದರೂ ಮಗನಿಂದ ಬಂದ ಪ್ರತಿಕ್ರಿಯೆಗೆ ಬೆರಗಾಗಿದ್ದೆ. ಮತ್ತದರ ನಿರೀಕ್ಷೆಯೂ ಇರಲಿಲ್ಲ. ಇಲ್ಲ ಕಣೋ ಬಹಳ ದಿನದಿಂದ ಒಂದೇ ತೆರನಾದ ರುಚಿ, ಕೈ ಅಡುಗೆ ತಿಂತಾ ಇದ್ದೀಯಲ್ಲ.ಅದೂ ಅಲ್ಲದೇ ನಿತ್ಯ ಫಲಾವ್ ಬೇಕು ಅಂತೀಯಲ್ಲ,ಅದಕ್ಕೆ ನಿನಗೆ ಬೇಜಾರು ಬಂದಿದೆ. ಎಂದು ವಾಸ್ತವದ ಅರಿವು ಮೂಡಿಸಲು ಪ್ರಯತ್ನಿಸುತ್ತಿದ್ದೆ. ಇರಬಹುದು ಬಿಡು ಅಮ್ಮಾ,, ಆದ್ರೂ ನೀನ್ಯಾಕೆ ಮೊದಲಿನಂತೆ ಅಡುಗೆ ಮಾಡೋದಿಲ್ಲ ಈಗ, ಎನ್ನುತ್ತಲೇ ಎದ್ದು ನಡೆದಿದ್ದ. ಅಡುಗೆ ಮನೆಗೆ ಎಂಟ್ರಿ ಕೊಡುತ್ತಿದ್ದಂತೆ ಬೇಸಿನ್ ಒಳಗೆ ಇದ್ದ ಪಾತ್ರೆಗಳು. ಅಲ್ಲಲ್ಲೇ ತಿಂದು ಎದ್ದು ಹೋದ ತಟ್ಟೆಗಳು. ಒರೆಸಿ ಇಡಬೇಕಾದ ಪಿಂಗಾಣಿಗಳು. ಪಿಲ್ಟರ್ ಕೆಳಗೆ ಚೆಲ್ಲಿದ ನೀರು. ತುಂಬಿಟ್ಟ ತರಕಾರಿಳ ದಂಡು. ಜಾಗ ತಪ್ಪಿದ ಡಬ್ಬಿಗಳು. ಮಾಡಬೇಕಾದ ನಿತ್ಯದ ಏಕತಾನತೆಯ ನೋವನ್ನು ನೆನಪಿಸುತ್ತಿತ್ತು. ಸ್ವಲ್ಪ ಯೋಚಿಸಿ ಊಟ ಮಾಡುವವರಿಗೇ ಏಕತಾನತೆ ಕಾಡುವಾಗ ಅಡುಗೆ ಮಾಡುವರಿಗೆ ಇನ್ನೆಂತ ಏಕತಾನತೆ ಕಾಡುತ್ತದೆ ಎಂದು. ಕೇವಲ ಊಟ, ಅಡುಗೆ ವಿಷಯ ಮಾತ್ರವಲ್ಲ, ಪ್ರತೀ ಕೆಲಸದಲ್ಲೂ ಅಷ್ಟೇ ಮಾಡುವ ಕಷ್ಟ ಆಡುವವನಿಗೆ ಎಂದೂ ಅರ್ಥವಾಗುವದಿಲ್ಲ. ಅದಕ್ಕೇ ಹೇಳೋದು ಮಾತೊಗೆದು ಹೋಗುವಾಗಿನ ಅಹಂಕಾರ ಮೈ ಮುರಿದ ದುಡಿಯುವಾಗ ಇರೋದಿಲ್ಲ ಎಂದು. ಈಗ ಐದಾರು ತಿಂಗಳಿನಿಂದ ಕರೋನಾ ಕಾರಣದಿಂದಾಗಿ, ಕಾಲ ಎಲ್ಲರನ್ನೂ ಬದಿಗೆ ಸರಿಸಿ ತಾನು ಮಾತ್ರ ಓಡುತ್ತಿದೆಯೇ ಅನ್ನಿಸುತ್ತಿದೆ. ಅದೆಷ್ಟೋ ಜನರ ಮನದೊಳಗೆ ಏಕತಾನತೆ ರೇಜಿಗೆ ಹುಟ್ಟಿಸುವಷ್ಟು ಹರಡಿಕೊಂಡಿದೆ. ತಲೆ ತಲಾಂತರಗಳಿಂದ ನಡೆದುಕೊಂಡು ಬಂದ ಪದ್ದತಿಗೆ ಪುಲ್ ಸ್ಟಾಪ್ ಇಟ್ಟು ನಗುತ್ತಿದೆ. ಕರೋನಾ. ಇಂದು ಸರಿ ಹೋಗುತ್ತದೆ, ನಾಳೆ ಸರಿ ಹೋಗುತ್ತದೆ, ಎಂದು ಕಾದು ಕಾದು ಸುಸ್ತಾದ ಭಾವಗಳಿಗೆ ವಾಸ್ತವದ ಅರಿವು ಮೂಡಿಸಲು ಶತ ಪ್ರಯತ್ನ ಪಡುತ್ತಿದ್ದೇವೆ. ಒಂದೇ ಊಟ, ಒಂದೇ ನೋಟ, ಒಂದೇ ಮಾತು,ಕುಳಿತಲ್ಲೇ ಕೆಲಸ,ಪಿಳಿ ಪಿಳಿ ಕಣ್ಣು ಅದೇ ಮುಖ,ಅದೇ ಭಾವ,ಎಲ್ಲಿಯೂ ಹೋಗೋದು ಬರೋದು ಅಂತೂ ಇಲ್ವೇ ಇಲ್ಲ.ಕೇವಲ ಭಯ ಭಯ. ಕಪಾಟಿನಲ್ಲಿ ಡ್ರೆಸ್ಸುಗಳಂತೆ ಬದುಕು ಬಣ್ಣ ಮಾಸುತ್ತಿದೆ ದುಬಾರಿ ಮೇಕಪ್ ಕಿಟ್‌ಗಳಂತೆ ಭಾವಗಳು ಡೇಟ್ ಬಾರ ಆಗುತ್ತಿವೆ. ಒಂದಿನ ರಜೆ ಸಿಕ್ಕಿದ್ರೆ ಸಾಕಪ್ಪ ಅಂತಿದ್ದವರು ಯಾವಾಗಪ್ಪ ಕೆಲಸಕ್ಕೆ ಹೋಗೋದು ಎಂದು ಒದ್ದಾಡುತ್ತಿದ್ದಾರೆ. ಮಾಡಬೇಕಾದ ಕೆಲಸಗಳೆಲ್ಲ ಮಕಾಡೆ ಮಲಗಿವೆ. ಆದರೆ ರಾತ್ರಿ ಬೆಳಗು ಮಾತ್ರ ಆಗುತ್ತಲೇ ಇದೆ,  ನಾವು ಮಾತ್ರವೇ ನಿಂತ ನೀರಾಗಿದ್ದೇವೆ ಎಂದು ಅಲವತ್ತು ಕೊಳ್ಳುತ್ತ,  ಆವಾಹನೆ ಮಾಡದೇ ಹೋದರೂ ಬರುವ ಬೇಸರದ ಬೂತಕ್ಕೆ ಬಸವಳಿದು ಹೋಗಿದ್ದೇವೆ. ಆರಂಭದ ಬದಲಾವಣೆಯನ್ನು ನಗು ನಗುತ್ತಲೇ ಸ್ವೀಕರಿಸಿದ ನಾವು,ಹೊಸ ಮಾರ್ಪಾಡಾಗಿ ಬದಲಾಯಿಸಿಕೊಳ್ಳಬೇಕೆಂದುಕೊಂಡ ನಾವು, ಈಗ ಮುಗುಮ್ಮಾಗಿ ಕುಳಿತಿದ್ದೇವೆ. ಉತ್ಸಾಹ ಕುಂದಿದೆ.ಅಯ್ಯೋ ಏನಾದರೂ ಆಗಲಿ, ಒಂದು ಬದಲಾವಣೆ ಬರಲಿ, ಎಂದು ಬಕ ಪಕ್ಷಿಯಂತೆ ಕಾಯುತ್ತಿದ್ದೇವೆ. ಬಂದಿಸಿಟ್ಟ ಸಮಯವನ್ನೂ ಸಂಯಮದಿಂದ ಕಳೆಯಬೇಕು. ಹೊಸತೇನ್ನೋ ಕಂಡುಕೊಳ್ಳಬೇಕು,ಎಂದು ಮನಸಿನಲ್ಲಿ ಲೆಕ್ಕ ಹಾಕಿದ ಸರಕುಗಳೆಲ್ಲ ಮುಗಿದು ಹೋಗಿವೆ. ಏನನ್ನೇ ಆದರೂ ಎದುರಿಸುವ ಛಲ ಕಳ್ಳಬೆಕ್ಕಿನಂತೆ ಓಡಾಡುತ್ತಿದೆ. ಯಾವ ಏಕತಾನತೆಯೇ ಆದರೂ ಬೇಸರ ತರಿಸುವುದು ಮನುಷ್ಯನ ಸ್ವಾಭಾವಿಕ ಗುಣಲಕ್ಷಣ,ಬಂಗಲೆಯಲ್ಲಿ ಬದುಕುವವಗೆ ಗುಡಿಸಲು ಆಕರ್ಷಿಸುವಂತೆ, ಗುಡಿಸಲು ಅರಮನೆಯ ಕನಸು ಕಾಣುವಂತೆ, ನಿರಂತರವಾದ ಸುಖ, ಪ್ರೀತಿ,ನೋವು, ಕಷ್ಟಗಳೂ, ಬದಲಾವಣೆಯನ್ನು ಬಯಸುತ್ತವೆ ಮತ್ತು ಬದಲಾವಣೆಯ ಮಾರ್ಗವನ್ನೂ ಕಂಡುಕೊಳ್ಳುತ್ತವೆ. ಯಾಕೆಂದರೆ ಮನುಷ್ಯ ಸದಾ ಚಲನೆಯನ್ನು ಇಷ್ಟಪಡುತ್ತಾನೆ. ನಿಂತ ನೀರಾದರೆ ಅಸಾಧ್ಯ ಅಸಹನೆಯಿಂದ ಗಬ್ಬುನಾರಲು ಶುರುವಾಗುತ್ತಾನೆ. ಓಡುವ ಮೋಡ,ಹರಿಯುವ ನದಿ. ಬೀಸುವ ಗಾಳಿ,ಕೊನೆಗೆ ಭೂಮಿ ಸೂರ್ಯ ಚಂದ್ರ ಸಕಲ ಗ್ರಹಗಳೂ ಚಲನೆಯ ಪ್ರತೀಕವೇ.ಅವುಗಳನ್ನೆಲ್ಲ ಹೇಗೆ ತಡೆದು ಹಿಡಿಯಲು ಸಾಧ್ಯವಿಲ್ಲವೋ , ತಡೆದರೂ ಅನಾಹುತವಾಗುವದೋ, ಮನುಷ್ಯನ ಚಲನೆಯನ್ನು ತಡೆದರೂ ಅದೇ ಸಂಭವಿಸುತ್ತದೆ.  ಇನ್ನು ಪುಟ್ಟ ಪುಟ್ಟ ಮಕ್ಕಳನ್ನು ಹೇಗೆ ಒಂದೇ ಗತಿಯಲ್ಲಿ ಇಡಲು ಸಾಧ್ಯ. ಬಹಳವೇ ಖಿನ್ನರಾಗುತ್ತಿದ್ದಾರೆ ಅವರು. ಶಾಲೆ ಎನ್ನುವುದು ಮಕ್ಕಳಿಗೆ ಬೇಸರಕ್ಕಿಂತ ಹೆಚ್ಚು ಆಪ್ತಸಂಗತಿ. ಮನೆಯಲ್ಲಿ ಇದ್ದೂ ಇದ್ದೂ ಏನೂ ಘಟಿಸದ ಬದುಕಿನಿಂದ ಬೇಸತ್ತ ಭಾವ ಹಲವು ಮಕ್ಕಳಲ್ಲಿ ವ್ಯಕ್ತವಾಗುತ್ತಿದೆ. ಸ್ವಚ್ಚಂದ ಹಕ್ಕಿಗಳ ಗೂಡಿನಲ್ಲಿ ತುಂಬಿದರೆ ಏನಾದೀತು ಅಲ್ಲವೇ!? ಎನನ್ನೇ ಆದರೂ ಸ್ವಲ್ಪ ದಿನ ಸಹಿಸಿಕೊಳ್ಳುತ್ತದೆ. ಮನಸು. ಬಹಳ ಧೀರ್ಘಕಾಲದವರೆಗಿನ ಏಕತಾನತೆಗೆ ಒಳಗಾಗಲಾರದು. ಬದಲಾವಣೆ ಬಯಸುತ್ತಲೇ ಇರುತ್ತದೆ. ಆಗಲೇ ಅಲ್ಲವೇ? ನಾವು ಪ್ರವಾಸ, ಶಾಪಿಂಗ್,ಸಂಬಂಧಿಕರಮನೆ,ಅಂತೆಲ್ಲ ತಾತ್ಕಾಲಿಕ ಗ್ಯಾಪ್ ತೆಗೆದುಕೊಂಡು ಮತ್ತೆ ಸ್ವಕ್ಷೇತ್ರಕ್ಕೆ ಮರಳುವದು. ಜೀವನದ ಪರ್ಯಂತ ನಾವು ಹೀಗೆ ಮನಸ್ಸನ್ನು, ಬದುಕನ್ನು, ರಿಪ್ರೆಷ್ ಆಗುವ ಕಾರ್ಯ ಮಾಡುತ್ತಲೇ ಇರುತ್ತೇವೆ,ಏಕೆಂದರೆ ಆಗಾಗ ಬರುವ ಏಕತಾನತೆಯಿಂದ ಮಕ್ತಿಪಡೆಯಲು,ಅದು ಸರಿಕೂಡಾ. ಆದರೆ ಈಗ !? ಬದಲಾವಣೆಗಳನ್ನು ಬರಮಾಡಿಕೊಳ್ಳಲಾಗದೇ ಅಸಹಾಯಕರಾಗಿ ಪರ ಪರ ಕೆರೆದುಕೊಳ್ಳುವ ಹಂತಕ್ಕೆ ತಲುಪಿದ್ದೇವೆ. ಅಪರೂಪಕ್ಕೆ ಹೊರಗೆ ಕಾಲಿಟ್ಟ ಗಳಿಗೆಯನ್ನೇ ಭಯಂಕರ ಖುಷಿಯಲ್ಲಿ ಹಂಚಿಕೊಳ್ಳುತ್ತಿದ್ದೇವೆ. ಇಷ್ಟೆಲ್ಲ ಬದಲಾವಣೆಗಳನ್ನು ಮನಸು ಬಯಸುವಾಗ, ಇನ್ನೆಷ್ಟು ದಿನ ಒಂದೇ ರುಚಿಯ ಫಲಾವ್ ಅನ್ನೇ ಹೊಗಳಿ ಹೊಗಳಿ ತಿನ್ನಲು ಸಾಧ್ಯ!? ಅವನ ಏಕತಾನತೆಗೂ ಅರ್ಥವಿದೆ ಅಂತನ್ನಿಸಿತು ನನಗೂ. ಮತ್ತೆ ನನ್ನೆದುರು ಬಂದು ಅಮ್ಮಾ ಶಾಲೆ ಶುರುವಾದರೆ ಎಲ್ಲ ಸರಿಯಾಗುತ್ತೆ ಅಂದ. ಹೌದು ಕಣೋ ಶಾಲೆಗೆ ಹೋಗಿ ಬಿಸಿಯೂಟ ಉಂಡು ಸ್ನೇಹಿತರ ಜೊತೆ ಕಳೆದು ಓದು ಬರಹ ತಲೆ ತುಂಬಾ ಹೊದ್ದು ಹೈರಾಣಾದಾಗ. ಖಂಡಿತವಾಗಿ ಮತ್ತದೇ ಫಲಾವ್ ಗೆ ಬಾಯಿ ಚಪ್ಪರಿಸುತ್ತೀಯಾ. ಬದುಕೂ ಹಾಗೆ  ಸಂಪೂರ್ಣವಾಗಿ ನಿರಂತರ ಬದಲಾವಣೆಯೊಂದಿಗೇ ಅನುಭವಿಸುತ್ತಿರಬೇಕು ಆಗಲೇ ಲವಲವಿಕೆ. ಕಾಲ ಚಕ್ರದ ಗತಿಯಲ್ಲಿ ಏಳುಬೀಳುಗಳ ಸರಿದೂಗಿಸಿ ಹೋರಾಡುತ್ತಿದ್ದರೇ ಬದುಕಿಗೊಂದು ಅರ್ಥ ಎಂದೆ. ಬೇಗ ಶಾಲೆ ಶುರುವಾಗಲಿ ಎಂದು ಪ್ರಾರ್ಥಿಸುತ್ತಿದ್ದ. *******************************************************

ಏಕೀ ಏಕತಾನತೆ Read Post »

ಕಾವ್ಯಯಾನ

ಮಿಗೆಯಗಲ ನಿಮ್ಮಗಲ

ಕವಿತೆ ಮಿಗೆಯಗಲ ನಿಮ್ಮಗಲ ನೂತನ ದೋಶೆಟ್ಟಿ ದೇಹವನೆ ದೇಗುಲ ಮಾಡಿಜಗ ಮುಗಿಲುಗಳಗಲ ನಿಂತಕಾಣಲಾರದ ಕೂಡಲಸಂಗನಕರಸ್ಥಲದಲ್ಲೆ ಕರೆಸಿಭಕ್ತಿ ದಾಸೋಹವನೆಗೈದಜಗದ ತಂದೆ ಸಕಲ ಜೀವರಾತ್ಮವೂ ಪರಶಿವನ ನೆಲೆಮೇಲು – ಕೀಳೆಂಬುದು ಇಳೆಯ ಕೊಳೆಇದ ತೊಳೆವುದೇ ಶಿವ ಪಾದಪೂಜೆಕೂಡುಂಡ ಅನ್ನವೇ ಕರಣಪ್ರಸಾದಅರಿವ ಜ್ಯೋತಿ ಬೆಳಗಿಸಿದಕ್ರಾಂತಿಕಾರಿ ಅಣ್ಣ ದಯೆಯ ಬೀಜಮಂತ್ರವ ಪಠಿಸಿಸುಳ್ಳು- ಸಟೆ ಬಿಡುನೀತಿ ನಡೆ ನುಡಿಯೇ ಕೂಡಲಸಂಗಮಆವು ತಾವೆಂಬ ಸರಳತೆಯ ಕಲಿಸಿದಮಮತೆಯ ಮಾತೆ ಚಂದ್ರ- ಚಕೋರರ, ಭ್ರಮರ – ಬಂಡುವಅಂಬುಜ- ರವಿ, ಜ್ಯೋತಿ – ತಮಂಧಆಡುವ ನವಿಲು, ಓದುವ ಗಿಳಿಜಗವ ಅವನಲಿ ಕಂಡುತನ್ನ ಅವನಲಿ ಪಡೆದುಆರಾಧಿಪ ಕವಿ ಇಳೆಯ ಬಾಚಿ ನಿಂತುಭಕ್ತಿ -. ವಿರಕ್ತಿಗಳ ಮುಕ್ತಿಸಿನೀತಿ – ದಯೆಗಳ ನುಲಿಸುವಆನು – ತಾನುಗಳ ಪ್ರಣವಜಂಗಮಕ್ಕಳಿವಿಲ್ಲ ದಿಟ. *************************************************

ಮಿಗೆಯಗಲ ನಿಮ್ಮಗಲ Read Post »

ಅಂಕಣ ಸಂಗಾತಿ, ದಿಕ್ಸೂಚಿ

ಮರೆವಿಗೆ ಇಲ್ಲಿದೆ ರಾಮಬಾಣ           ಹಗಲು ರಾತ್ರಿ ಕಣ್ಣಲ್ಲಿ ಎಣ್ಣೆ ಬಿಟ್ಟುಕೊಂಡು ಓದ್ತಿನಿ.ಆದರೂ ಬೇಕೆಂದಾಗ ನೆನಪಿಗೆ ಬರುವುದೇ ಇಲ್ಲ. ಅದೂ ಪರೀಕ್ಷೆ ಸಮಯದಲ್ಲಂತೂ ಸರಿಯಾಗಿ ಕೈ ಕೊಡುತ್ತದೆ ಏನು ಮಾಡಬೇಕು ತಿಳಿಯುತ್ತಿಲ್ಲ. ಎನ್ನುವುದು ಬಹಳಷ್ಟು ಪರೀಕ್ಷಾರ್ಥಿಗಳ ದೊಡ್ಡ ಸಮಸ್ಯೆ. ನನ್ನ ಮಕ್ಕಳು ಓದಲ್ಲ ಅಂತಿಲ್ಲ. ಎಲ್ಲವನ್ನೂ ಓದ್ತಾರೆ.ಆದರೆ ಅವರಿಗೆ ಜ್ಞಾಪಕ ಶಕ್ತಿದೇ ಸಮಸ್ಯೆ. ಪರೀಕ್ಷೆಯಲ್ಲಿ ಓದಿದ್ದು ಚೆನ್ನಾಗಿ ನೆನಪಿಗೆ ಬರಲಿಲ್ಲ ಅದಕ್ಕೆ ಅಂಕ ಕಡಿಮೆ ಬಂದಿದೆ ಎಂದು ಕಣ್ಣಿರಿಡುತ್ತಾರೆ ನಮಗೇನು ಮಾಡಬೇಕು ಅಂತ ಹೊಳಿತಿಲ್ಲ ಎನ್ನುವುದು ಹಲವು ಹೆತ್ತವರ ಗೋಳು. ಈ ಸಮಸ್ಯೆಗೆ ಅವರಿವರ ಜೊತೆ ಚರ್ಚಿಸಿ ಕೆಲ ಟಿಪ್ಸ್ ಸಿಕ್ಕರೂ ಅವು ಅಷ್ಟೊಂದು ಫಲ ನೀಡುತ್ತಿಲ್ಲ ಅನ್ನೋದು ಕೆಲವು ಪಾಲಕರ ಚಿಂತೆ. ಮರೆವು ಎನ್ನುವುದು ಒಂದು ರೋಗವೇ? ಇದಕ್ಕೆ ಮದ್ದು ಇಲ್ಲವೇ? ನನಗೆ ಜ್ಞಾಪಕ ಶಕ್ತಿ ಕಡಿಮೆ ಎಂಬ ಭ್ರಮೆ ತಲೆಯಲ್ಲಿ ಪ್ರ್ರಾರಂಭವಾದರೆ  ಅದನ್ನು ಹೋಗಲಾಡಿಸುವುದು ಕಷ್ಟ ಸಾಧ್ಯ.ಮರೆವು ಒಂದು ವರವೂ ಹೌದು. ಮರೆವು ಇರದಿದ್ದರೆ ಕಹಿ ಘಟನೆಗಳನ್ನು ದುಃಖದ ಸಂಗತಿಗಳನ್ನು ಮರೆಯಲು ಸಾಧ್ಯವಾಗದೇ ಬಾಳು ನಿತ್ಯ ನರಕವಾಗುತ್ತಿತ್ತು. ಪ್ರಮುಖ ವಿಷಯಗಳನ್ನು ಮರೆಯದೇ ನೆನಪಿÀಡಬೇಕೆ? ಹಾಗಾದರೆ ಇಲ್ಲಿದೆ ಅದಕ್ಕೆ ರಾಮಬಾಣ.  ಅಟೋ ಸಜೇಷನ್  ಸಾಮಾನ್ಯವಾಗಿ ಜ್ಞಾಪಕ ಶಕ್ತಿ ಎಲ್ಲರಲ್ಲೂ ಒಂದೇ ರೀತಿಯಲ್ಲಿರುತ್ತದೆ. ಇದನ್ನು ದಿನ ನಿತ್ಯ ಮೊಂಡಾದ ಚಾಕು ಹರಿತಗೊಳಿಸುವಂತೆ, ಪರಿಶ್ರಮದಿಂದ ವೃದ್ಧಿಸಿಕೊಳ್ಳುತ್ತಾರೆ. ಗೆಲುವು ಸಾಧಿಸುತ್ತಾರೆ. ಇನ್ನೂ ಕೆಲವರು ತಮ್ಮಲ್ಲಿ ಜ್ಞಾಪಕ ಶಕ್ತಿಯ ಪ್ರಮಾಣವೇ ಕಡಿಮೆ ಇದೆ ಎಂಬ ಭ್ರಮೆಗೆ ಜೋತು ಬಿದ್ದು ವಿಫಲರಾಗುತ್ತಾರೆ. ಕೆಲ ಜನರು ತೀರಾ ಅನಗತ್ಯವೆನಿಸುವ ವಿಷಯಗಳನ್ನು ಪ್ರಮುಖವೆಂದು ಭಾವಿಸಿ ಆ ಸಂಗತಿಗಳು ತಮ್ಮ ತಲೆಯಲ್ಲಿ ಉಳಿಯುವುದಿಲ್ಲ ಎಂದು ಚಿಂತಿಸುತ್ತಾರೆ. ನಿಜ ಹೇಳಬೇಕೆಂದರೆ ಚಿಕ್ಕ ಪುಟ್ಟ ವಿಷಯಗಳಿಗೆ ಹೆಚ್ಚು ಸಮಯ ವ್ಯರ್ಥ ಮಾಡುತ್ತಿಲ್ಲ ಎಂದು ಖುಷಿ ¥ಡಬೇಕು ನೀವು ಪುಸ್ತಕ ಪೆನ್ನು ಇತ್ಯಾದಿ . ದಿನ ನಿತ್ಯ ಇಡುವ ಜಾಗದಲ್ಲಿ ಇಡದೇ ಬೇರೆ ಜಾಗದಲ್ಲಿಟ್ಟು ಹುಡುಕುತ್ತ ಇತ್ತೀಚಿಗೆ ನನಗೆ ಮರೆವು ಹೆಚ್ಚಾಗ್ತಿದೆ ಎಂದು ಬೇಸರಿಸಿಕೊಂಡರೆ ಅದೊಂದು ರೀತಿಯ ಮೂರ್ಖತನವೇ ಅಲ್ಲವೇ? ಎಲ್ಲೋ ಇಟ್ಟು ಎಲ್ಲೋ ಹುಡುಕಿದರೆ ಸಿಗುವುದಾದರೂ ಹೇಗೆ? ನನಗೆ ಜ್ಞಾಪಕ ಶಕ್ತಿ ಕಡಿಮೆ ಮರೆವು ಜಾಸ್ತಿ ಎಂದು ಪದೇ ಪದೇ ಹೇಳಬೇಡಿ. ಈ ಸಂಗತಿ  ಮೆದುಳಲ್ಲಿ ಪ್ರತಿಷ್ಟಾಪಿಸಿದರೆ ಅಪಾಯಕಾರಿ. ನನಗೆ ಅದ್ಭುತ ಜ್ಞಾಪಕ ಶಕ್ತಿ ಇದೆ ಎಂದು ಅಟೋ ಸಜೆಷನ್ (ಸ್ವ ಸಲಹೆ) ಕೊಟ್ಟುಕೊಳ್ಳಿ ಪರಿಣಾಮವೂ ಅದ್ಭುತವಾಗಿರುತ್ತದೆ. ಆಸಕ್ತಿ ವಲಯ ಬದಲಿಸಿ ನಿಮಗೆ ಕ್ರಿಕೆಟ್ ನಲ್ಲಿ ಆಸಕ್ತಿ ಇದ್ದರೆ ಯಾರು ಎಷ್ಟು ಶತಕ ಬಾರಿಸಿದರು? ಭಾರತ ಯಾವಾಗ ವಿಶ್ವ ಕಪ್ ಗೆದ್ದಿತು? ಯಾರು  ಬ್ಯಾಟಿಂಗ್  ದಾಖಲೆ ಸಾಧಿಸಿದ್ದಾರೆ ಎನ್ನುವ ಪ್ರಶ್ನೆಗಳಿಗೆ ನಿರಾಯಾಸವಾಗಿ ಉತ್ತರಿಸುತ್ತೀರಿ. ಒಂದು ವೇಳೆ ಸಿನಿಮಾದಲ್ಲಿ ಆಸಕ್ತಿ ಇದ್ದರೆ ಯಾವ ಸಿನಿಮಾದಲ್ಲಿ ಯಾರು ಹೀರೋ? ನಿರ್ದೇಶನ ಯಾರದು ಎಂಬಿತ್ಯಾದಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡುತ್ತೀರಿ. ಸಂಗೀತದಲ್ಲಿ ಆಸಕ್ತಿ ಇದ್ದರೆ ಗೀತೆ ರಚನೆಕಾರರು ಯಾರು? ಹಾಡಿದವರು ಯಾರು? ಎನ್ನುವ ಪ್ರಶ್ನೆಗಳಿಗೆ ಅರೆ ಕ್ಷಣ ಯೋಚಿಸದೇ ಫಟಾ ಫಟ್ ಉತ್ತರಿಸಿ ಬಿಡುತ್ತಿರಿ. ಇಷ್ಟವಾದ ವಿಷಯಗಳನ್ನು ನೆನಪಿಡಲು ಕಷ್ಟವೆನಿಸುವುದಿಲ್ಲ. ಆದರೆ ಇಷ್ಟ ಇಲ್ಲದ ವಿಷಯ ಬಂದಾಗ ಮರೆವು ಜಾಸ್ತಿ ಇದೆ ಎನ್ನುವ ದೂರು ನೀಡುವ ನಿಮಗೆ ಇದೆಲ್ಲ ಉತ್ತರಿಸೋಕೆ ಹೇಗೆ ಸಾಧ್ಯ? ಎಂಬ ಪ್ರಶ್ನೆ ಭ್ರಮೆಯಲ್ಲಿರುವವರಿಗೆ ಹೆಚ್ಚಾಗಿ ಮೂಡುವುದಿಲ್ಲ. ಒಮ್ಮೆ ಪ್ರಶ್ನಿಸಿಕೊಂಡು ನೋಡಿ ಹೌದು ನನ್ನಲ್ಲಿ ಜ್ಞಾಪಕ ಶಕ್ತಿ ಅಗಾಧವಾಗಿದೆ. ಆದರೆ ನನ್ನ ಆಸಕ್ತಿ ವಲಯ ಬದಲಿಸಿದರೆ ನಾನು ಓದಿಗೆ ಸಂಬಂಧಿಸಿದ ಅಥವಾ ನನಗೆ ಬೇಕಾದ ವಿಷಯ ನೆನಪಿನಲ್ಲಿಟ್ಟುಕೊಳ್ಳಬಲ್ಲೆ ಎಂಬುದು ಸ್ಪಷ್ಟವಾಗುವುದು. ಪುನರಾವಲೋಕನ  ನೀವು ಓದಿದ ವಿಷಯಗಳನ್ನು ಮೇಲಿಂದ ಮೇಲೆ ಪುನರಾವಲೋಕನ ಮಾಡಿಕೊಳ್ಳುತ್ತಿರಬೇಕು  ಪುನರಾವರ್ತನೆಗೊಳ್ಳುವ ವಿಷಯಗಳನ್ನು ಮೆದುಳು ಅಷ್ಟು ಸಲೀಸಾಗಿ ಮರೆಯಲು ಸಾಧ್ಯವಿಲ್ಲ. ಪರೀಕ್ಷೆ ಬರೆಯುವಾಗ ಈ ವಿಷಯಗಳು ಖಂಡಿತ ನೆನಪಿಗೆ ಬರುವವು. ಒಮ್ಮೆ ಮನೆಯಲ್ಲಿ ಪ್ರಶ್ನೆ ಪತ್ರಿಕೆ ಬಿಡಿಸಿ ಪರೀಕ್ಷಿಸಿ ನೋಡಿ. ನಿಮಗೆ ಅಚ್ಚರಿ ಎನಿಸುತ್ತದೆ. ಪುನರಾವಲೋಕನ ಮನೋಬರಲವನ್ನು ಹೆಚ್ಚಿಸಿ ಜ್ಞಾಪಕ ಶಕ್ತಿಯನ್ನು ವೃದ್ಧಿಸುತ್ತದೆ. ಅರಿಯದೇ ನೋಡದೇ ಯೋಚಿಸದೇ ಕಾರ್ಯ ಮಾಡಬಾರದು ಎಂದು ವಿಷ್ಣು ಶರ್ಮ ಹೆಳಿದ್ದಾನೆ. ಅಂತೆಯೇ ಓದಿದ ವಿಷಯಗಳನ್ನು ಅರ್ಥೈಸಿಕೊಂಡು ಪುನರಾವಲೋಕನ ಮಾಡಿಕೊಳ್ಳಿ. ಅಕ್ರೋನಿಮ್ಸ್ ಬಳಸಿ ಹತ್ತು ಹಲವು ಅಂಶಗಳುಳ್ಳ ದೊಡ್ಡ ದೊಡ್ಡ ಉತ್ತರಗಳನ್ನು ನೆನಪಿನಲ್ಲಿಕೊಟ್ಟುಕೊಳ್ಳುವುದು ತುಂಬಾ ಕಷ್ಟ ಎನಿಸುವುದು ಸಹಜ. ಕಂಠ ಪಾಠ ಮಾಡುವ ಪದ್ದತಿ ಇಲ್ಲಿ ಉಪಯೋಗಕ್ಕೆ ಬಾರದು. ಶ್ಲೋಕಗಳು ಪದ್ಯಗಳು ಸುಭಾಷಿತಗಳನ್ನು ನೆನಪಿಡಲು ಮಾತ್ರ ಕಂಠ ಪಾಠ ಸೂಕ್ತ. ಕಾಮನಬಿಲ್ಲಿನಲ್ಲಿರುವ ಏಳು ಬಣ್ಣಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ವಿಬ್ಗಾರ್ ಎಂದು ಅಕ್ಷರ ಮುದ್ರಿಕೆಯನ್ನು ಉಪಯೋಗಿಸುತ್ತಾರೆ.  ದೊಡ್ಡ ಉತ್ತರಗಳ ಅಂಶಗಳ ಮೊದಲ ಅಕ್ಷರಗಳನ್ನು ಒಟ್ಟುಗೂಡಿಸಿದರೆ ಅಕ್ಷರ ಮುದ್ರಿಕೆ (ಸಣ್ಣ ಪದಗಳು) ಅಬ್ರಿವೇಶನ್ಸ್ನಂತೆ  ಆಗುತ್ತದೆ. ನೆನಪಿಟ್ಟುಕೊಳ್ಳಲು ಅನುಕೂಲವಾಗುವಂತೆ ವಾಕ್ಯವನ್ನು ರಚಿಸಿಕೊಳ್ಳಬಹುದು.ಅದೂ ಪರಿಣಾಮಾಕಾರಿ ಆಗಿರುತ್ತದೆ. . ಬೇಡ ಒತ್ತಡ ಕೇಳಿದ ಓದಿದ ನೋಡಿದ ವಿಷಯಗಳು ಮನದಲ್ಲಿ ಅಚ್ಚೊತ್ತಿದಮತೆ ಉಳಿಯಬೇಕೆಂದರೆ ಮನಸ್ಸು ಪ್ರಫುಲ್ಲವಾಗಿರಬೇಕು. ಒತ್ತಡದಿಂದ ಕೂಡಿದ್ದರೆ ಸಣ್ಣ ಸಂಗತಿಗಳನ್ನು ನೆನಪಿಲ್ಲಿಡಲು ಸಾಧ್ಯವಾಗುವುದಿಲ್ಲ. ಪ್ರಶಾಂತ ವಾತಾವರಣದಲ್ಲಿ ನಿಮ್ಮ ಓದು ಬರಹ ಸಾಗಲಿ. ದಿನ ನಿತ್ಯ ಕಲಿತ ಹೊಸ ಸಂಗತಿಗಳನ್ನು ಪುರ್ನಮನನ ಮಾಡಿಕೊಳ್ಳಿ. ಶ್ರೀರಂಗರು ಹೇಳಿದಂತೆ ಮಾನವರಿಗೆ ವಿಚಾರಕ್ಕಿಂತ ಆಚಾರದ ಮಹತ್ವವಿದೆ. ಬುದ್ಧಿಗಿಂತ ಶ್ರದ್ಧೆಗೆ ಮಹತ್ವವಿದೆ. ಹೀಗಾಗಿ ನೆನಪಿನ ಶಕ್ತಿಗೆ ಶ್ರದ್ಧೆ ಅತಿ ಮುಖ್ಯವಾದುದು. ಏಕಾಗ್ರತೆ ವಿವೇಕಾನಂದರು ನುಡಿವಂತೆ ಇಂದ್ರೀಯಗಳು ಪ್ರತಿಕ್ಷಣದಲ್ಲೂ ನಮ್ಮನ್ನು ಮೋಸಪಡಿಸುತ್ತಿರುತ್ತವೆ.ನಮ್ಮೆಲ್ಲ ಇಂದ್ರೀಯಗಳನ್ನು ನಿಗ್ರಹಗೊಳಿಸಿ ಒಂದೇ ಕಡೆ ಚಿತ್ತದ ಗಮನ ಹರಿಸುವುದೇ ಏಕಾಗ್ರತೆ. ಇಂದ್ರೀಯಗಳು ಯಾವಾಗಲೂ ಪರತಂತ್ರವಾಗಿವೆ. ಹೊರಗಣ ತಂತ್ರಗಳನ್ನು ಅವಲಂಬಿಸಿವೆ. ಹೀಗಾಗಿ ಯಾವುದೇ ಕೆಲಸ ಕಾರ್ಯದಲ್ಲಿ ತೊಡಗಿರುವಾಗ ಅದರಾಚಿಗಿನ ವಿಷಯವನ್ನು ಎಂದಿಗೂ ಯೋಚಿಸಬಾರದು. ವರ್ತಮಾನದಲ್ಲಿ ಮಾತ್ರ ಚಿತ್ತ ಮುಳಗಿರಬೇಕು. ಅಡುಗೆಗೆ ಉಪ್ಪು ಹೇಗೋ ಹಾಗೆ ಜ್ಞಾಪಕ ಶಕ್ತಿಯ ವೃದ್ಧಿಗೆ ಏಕಾಗ್ರತೆ. ಏಕಾಗ್ರತೆ ಇಲ್ಲದೇ ಸಣ್ಣ ಸಂಗತಿಯನ್ನು ಮೆದುಳಿನಲ್ಲಿ ದಾಖಲಿಸಲಾಗುವುದಿಲ್ಲ.  ಮನೆ ಮದ್ದು ಜ್ಞಾಪಕ ಶಕ್ತಿ ಹೆಚ್ಚಿಸಿಕೊಳ್ಳಲು ಸಹಕಾರಿಯಾಗುವ ಮನೆ ಮದ್ದುಗಳನ್ನು ಬಳಸಿ. ಸರಿಯಾದ ಸಮಯಕ್ಕೆ  ಸಮತೋಲಿತ ಆಹಾರ, ನೀರಿನ ಸೇವನೆ ವ್ಯಾಯಾಮ ನಿದ್ದೆ ಮೆದುಳಿಗೆ ಕಸರತ್ತು ನೀಡುವ ಮೆಮರಿ ಗೇಮ್ಸ್ಗಳನ್ನು ಆಡಿ ಅವು ಮೆದುಳನ್ನು ಬಲಪಡಿಸುತ್ತವೆ ಅದರೊಂದಿಗೆ ಈ ಎಲ್ಲವೂ ಜ್ಞಾಪಕ ಶಕ್ತಿಗೆ ಪರೋಕ್ಷವಾಗಿ ಪುಷ್ಟಿ ನೀಡುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ವಿಜ್ಞಾನಿಗಳು ಮತ್ತು ಮಾನಸಿಕ ತಜ್ಞರು ಜ್ಞಾಪಕ ಶಕ್ತಿ ಹೆಚ್ಚಿಸಲು ಅನೇಕ ವಿಧಾನಗಳನ್ನು ಕಂಡು ಹಿಡಿದಿದ್ದಾರೆ. ಅವುಗಳನ್ನು ತಿಳಿದು ಅಳವಡಿಸಿಕೊಳ್ಳಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಮರೆವಿಗೆ ಮದ್ದು ನೀಡುವ ಪುಸ್ತಕಗಳನ್ನು ಓದಿ. ಜ್ಞಾಪಕ ಸಕ್ತಿ ಹೆಚ್ಚಿಸಿಕೊಂಡು ಗೆಲುವಿನ ನಗೆ ಬೀರಿ. ********** ಲೇಖಕಿ ಜಯಶ್ರೀ ಜೆ ಅಬ್ಬಿಗೇರಿ ಸರಕಾರಿ ಪದವಿ ಪೂರ‍್ವ ಕಾಲೇಜಿನಲ್ಲಿ ಆಂಗ್ಲ ಭಾಷಾ ಉಪನ್ಯಾಸಕಿ . ಇವರ ಹನ್ನೆರಡು ಪುಸ್ತಕಗಳು ಪ್ರಕಟಗೊಂಡಿವೆ. ಓದು ಮತ್ತು ಬರಹ ಹಾಡುಗಾರಿಕೆ ಮಾತುಗಾರಿಕೆ ಇವರ ಹವ್ಯಾಸಗಳು

Read Post »

You cannot copy content of this page

Scroll to Top