ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಪ್ರೇಕ್ಷಕ ಪರಂಪರೆಯ ಅನ್ನದಾತರು

ಲೇಖನ ಪ್ರೇಕ್ಷಕ ಪರಂಪರೆಯ ಅನ್ನದಾತರು ಮಲ್ಲಿಕಾರ್ಜುನ ಕಡಕೋಳ ಯಶಸ್ವಿ ನಾಟಕವೊಂದರ ಕುರಿತು ಮಾತಾಡುವಾಗ ಎಂಥವರಿಗೂ ಆಧುನಿಕ ರಂಗಭೂಮಿ ಸಂದರ್ಭದಲ್ಲಿ ನಿರ್ದೇಶಕ ಪರಂಪರೆಯತ್ತ ಆದ್ಯಗಮನ. ಹಾಗೇನೆ ವೃತ್ತಿರಂಗಭೂಮಿ ಸಂದರ್ಭದಲ್ಲಿ ನಟನ ಪರಂಪರೆಯದು ಧುತ್ತನೆ ನೆರವಿಗೆ ನಿಲ್ಲುವ ನಿಲುವು. ನಮ್ಮ ಪ್ರೊಸಿನಿಯಮ್ ಥಿಯೇಟರ್ ಪ್ರದರ್ಶನಗಳು ಪ್ರೇಕ್ಷಕರೆಂಬ ಐಕಾನ್ ಗಳ ಮೂಲಕವೇ ಸಾಂಸ್ಕೃತಿಕ ಮೌಲ್ಯ ಗಳಿಸಿವೆಯೆಂಬ ದ್ಯಾಸವೇ ಇರಲ್ಲ. ಅಷ್ಟು ಮಾತ್ರವಲ್ಲದೇ ರಂಗಸಂಸ್ಕೃತಿಯ ಅಭಿವೃದ್ಧಿ ಹಾಗೂ ವಿಕಾಸದ ಸಾಧ್ಯತೆಯ ಕ್ಷಿತಿಜ ವಿಸ್ತಾರಗೊಳ್ಳುವುದೇ ಪ್ರೇಕ್ಷಕ ಪ್ರಭುಗಳಿಂದ. ಇಂತಹ ಮಹತ್ತರ ಸಂಗತಿಗಳನ್ನೇ ನೇಪಥ್ಯಕ್ಕೆ ಜರುಗಿಸುವ ಜಾಣ ಕೆಲಸ ಕೆಲವು ರಂಗಪಂಡಿತರು ಎಸಗುತ್ತಾರೆ. ಅಷ್ಟೇಯಾಕೆ ಕೆಲವೊಮ್ಮೆ ಹ್ಯಾವಕ್ಕೆ ಬಿದ್ದಂತೆ ನಿರ್ದೇಶಕ ಹಾಗೂ ನಟನಾ ಪರಂಪರೆ ಕುರಿತೇ ಹೆಚ್ಚು ಹೆಚ್ಚು ಚರ್ಚೆಯ ಒಣಪಾಂಡಿತ್ಯ ಮೆರೆಯುತ್ತಾರೆ. ಸಿನೆಮಾ, ನಾಟಕ, ಭಾಷಣ, ಪುಸ್ತಕ ಇತರೆ ಎಲ್ಲ ಸಾಂಸ್ಕೃತಿಕ ಜ್ಞಾನಶಿಸ್ತು ಪ್ರದರ್ಶನಗಳ ಕುರಿತು ನಿಕಷದ ಚಿಂತನೆಗಳು ಅಭಿವ್ಯಕ್ತಿಯ ಸ್ವರೂಪ ಪಡೆದುಕೊಳ್ಳುವಾಗ ಪ್ರೇಕ್ಷಕ, ಕೇಳುಗ, ಓದುಗ ಸಹೃದಯತೆಯ ಮಹತ್ವದ ಸ್ಥಾನವನ್ನು ಅಲಂಕರಿಸುತ್ತಾನೆಂಬುದು ಮರೆಯಲಾಗದು. ನಮ್ಮ ಪರಂಪರಾಗತ ಸಂಕಥನ ಪಾಠ್ಯಗಳಲ್ಲಿ ಇದೆಲ್ಲ ಉಲ್ಲೇಖನೀಯ ವಿಷಯ . ಅದರಲ್ಲೂ ವಿಶೇಷವಾಗಿ ವೃತ್ತಿರಂಗಭೂಮಿಯಲ್ಲಿ ಹಲವು ಸಾಂಸ್ಕೃತಿಕ ಪರಂಪರೆಗಳು ಶಿಖರಪ್ರಾಯದ ಉಲ್ಲೇಖಿತ ಮಟ್ಟದಲ್ಲಿವೆ. ಅಲ್ಲಿ ಪ್ರಮುಖವಾಗಿ ನಟನಾ ಪರಂಪರೆ, ರಂಗ ಸಂಗೀತ ಪರಂಪರೆ, ರಂಗಸಜ್ಜಿಕೆಗಳ ಪರಂಪರೆಗಳು ಆಕರ ಸ್ಥಾನ ಪಡಕೊಂಡಿವೆ. ಅಷ್ಟೇ ಮಹತ್ವದ ಮತ್ತೊಂದು ಪರಂಪರೆ ಅಲ್ಲಿದೆ. ಅದುವೇ ಸಹೃದಯ ಪ್ರೇಕ್ಷಕ ಪರಂಪರೆ. ಎಷ್ಟೋ ಬಾರಿ ವೃತ್ತಿರಂಗಭೂಮಿಯ ನಾಟಕಗಳಲ್ಲಿ ಪ್ರೇಕ್ಷಕ ಅದೆಂತಹ ಮಹತ್ವ ಪಡೆದುಕೊಳ್ಳುತ್ತಾನೆಂದರೆ, ಕಲಾವಿದರು ನಾಟಕದ ನಡುವೆಯೇ ಪ್ರೇಕ್ಷಕರೊಂದಿಗೆ ಸಂಭಾಷಣೆಗೆ ಇಳಿಯುವ ಸನ್ನಿವೇಶಗಳು ಸ್ವಾಭಾವಿಕವಾಗಿ ಸೃಷ್ಟಿಯಾಗುತ್ತವೆ. ವೃತ್ತಿ ರಂಗದ ನಟನಟಿಯರು ಯಾವುದೇ ಮಡಿವಂತಿಕೆ ಇಲ್ಲದೇ ಕಾಕಾ, ಅಣ್ಣಾ, ಮಾಮಾ ಅಂತ ಪ್ರೇಕ್ಷಕರೊಂದಿಗೆ ಸಂಬೋಧನೆಗೆ ತೊಡಗುವ ಸಂದರ್ಭೋಚಿತ ಸನ್ನಿವೇಶಗಳು ನಗೆಗಡಲ ಜಳಕ ಮಾಡಿಸುತ್ತವೆ. ಇನ್ನು ಕಲಾವಿದರಿಂದ ಸುಪರ್ ಹಿಟ್ ಡೈಲಾಗ್ ಕೇಳಿದೊಡನೆ, ಅಂತಹದ್ದೇ ಮನಮೆಚ್ಚುಗೆಯ ರಂಗಸಂಗೀತ ಕೇಳಿದಾಗ ಸಂತುಷ್ಟರಾದ ಪ್ರೇಕ್ಷಕರು ಸಿಳ್ಳು, ಚಪ್ಪಾಳೆಗಳ ಸುರಿಮಳೆಗೈಯ್ಯುತ್ತಾರೆ. ಅದು ಅಷ್ಟಕ್ಕೆ ತಮಣಿಯಾಗದೇ ಪ್ರೇಕ್ಷಕಾಂಗಣದ ಸಂತಸ ಸಂಭ್ರಮದ ಎಲ್ಲೆ ಮೀರಿ ಒನ್ಸ್ ಮೋರ್ ಎಂದು ಭಾವ ಪರವಶರಾಗಿ ಜೋರಾಗಿ ಕೂಗುತ್ತಾರೆ. ಅವರ ಮೆಚ್ಚುಗೆಯ ಕೂಗಿಗೆ ಗೌರವತೋರಿ ಮತ್ತದೇ ಹಾಡು, ಡೈಲಾಗ್ ಮರುಕಳಿಸುತ್ತವೆ. ಹೀಗೆ ಕಲಾವಿದರು ಮತ್ತು ಪ್ರೇಕ್ಷಕರ ನಡುವೆ ಅಪರೂಪದ ರಂಗಸಂಸ್ಕೃತಿಯೊಂದರ ಸಂಪ್ರೀತಿಯ ಸಂವಾದ, ಸಂವಹನವೇ ಏರ್ಪಡುತ್ತದೆ. ವರನಟ ಡಾ. ರಾಜಕುಮಾರ ಅವರು ವೃತ್ತಿರಂಗಭೂಮಿಯ ರಂಗಮೌಲ್ಯ ಮೆರೆದ ಪ್ರಾತಃಸ್ಮರಣೀಯರು. ಅಂತೆಯೇ ಅವರು ಪ್ರೇಕ್ಷಕ ಪ್ರಭುಗಳಿಗೆ ಅಭಿಮಾನಿ ದೇವರುಗಳೆಂತಲೇ ಕರೆದು ಗೌರವ ತೋರುತ್ತಿದ್ದರು. ಮಾಸ್ಟರ್ ಹಿರಣ್ಣಯ್ಯನವರು ಯಾವತ್ತೂ ಪ್ರೇಕ್ಷಕರನ್ನು ಅನ್ನದಾತರೆಂದೇ ಬಾಯ್ತುಂಬಾ ಅಂತಃಕರಣ ತುಂಬಿ ಪ್ರೀತ್ಯಾದರ ತೋರುತ್ತಿದ್ದರು. ಏಣಗಿ ಬಾಳಪ್ಪ ಹಾಗೂ ಇನ್ನು ಕೆಲವು ಕಂಪನಿಗಳಲ್ಲಿ ಪ್ರೇಕ್ಷಕರಿಗೆ ಶರಣು ಹೇಳುವ ಸನ್ನಿವೇಶಗಳು ರಂಗಪ್ರಯೋಗದಂತೆ ಮಹತ್ವದ ಸ್ಥಾನ ಗಳಿಸಿದ್ದವು. ಕ್ಯಾಂಪ್ ಮಾಡಿದ ಊರುಗಳಲ್ಲಿ ಆಯ್ದ ಪ್ರೇಕ್ಷಕರಿಗೆ ಗೌರವಪಾಸ್ ನೀಡಿ ನಾಟಕಕ್ಕೆ ಆಮಂತ್ರಿಸುವ ಪದ್ಧತಿಯೇ ಇತ್ತು. ವೃತ್ತಿ ರಂಗಭೂಮಿಯ ಆರಂಭದ ಅಂದಿನಿಂದ ಇಂದಿನವರೆಗೂ ಒಂದೂವರೆ ಶತಮಾನ ಕಳೆದರೂ ಪ್ರೇಕ್ಷಕ ಮಹಾಶಯರ ಮೇಲಿನ ಗೌರವ, ಪ್ರೀತಿ, ವಿಶ್ವಾಸ ದಿನೇ ದಿನೇ ಹೆಚ್ಚುತ್ತಲೇ ಬಂದಿದೆ. ಅದೊಂದು ಅಮೂಲ್ಯ ಪರಂಪರೆ ಮಾತ್ರವಾಗಿ ಬೆಳೆಯದೇ ರಂಗಸಂಸ್ಕೃತಿಯ ಅನನ್ಯತೆಯಾಗಿ ಬೆಳೆಯುತ್ತಲೇ ಮುನ್ನಡೆ ಸಾಧಿಸಿದೆ. ಇಂತಹ ಸಹೃದಯ ಪರಂಪರೆ ಆಧುನಿಕತೆಯ ಬೇರೊಂದು ರಂಗಪ್ರಕಾರಗಳಲ್ಲಿ ಹುಡುಕಿದರೂ ನಮಗೆ ಕಾಣಸಿಗುವುದಿಲ್ಲ. ಪ್ರಾರಂಭಿಸಲ್ಪಟ್ಟ ನಾಟಕ ಇನ್ನೊಂದು ಮಹತ್ವದ ಸನ್ನಿವೇಶದೊಂದಿಗೆ ಮಂಗಲ ಹಾಡುತ್ತದೆ. ಯಾವತ್ತೂ ನಮ್ಮನ್ನು ಪ್ರೋತ್ಸಾಹಿಸಿ ನಮಗೆ ಅನ್ನ ನೀಡುತ್ತಿರುವ ತಂದೆ ತಾಯಿ ಸ್ವರೂಪಿ ಅನ್ನದಾತ ಪ್ರೇಕ್ಷಕ ಮಹಾಪ್ರಭುಗಳ ಅಡಿದಾವರೆಗಳಿಗೆ ಪೊಡಮೊಟ್ಟು…. ಎಂಬ ಸವಿನಯ ಪ್ರಾರ್ಥನೆಯ ಮಾತುಗಳು ಲೆಕ್ಚರ್ ಸೀನ್ ಎಂಬ ನುಡಿಗಟ್ಟಿನೊಂದಿಗೆ ಇವತ್ತಿಗೂ ಎಲ್ಲಾ ನಾಟಕ ಕಂಪನಿಗಳು ಪ್ರೇಕ್ಷಕ ಪರಂಪರೆಗೆ ಗೌರವಿಸುವ ಪರಿಪಾಠಗಳನ್ನು ತಪ್ಪದೇ ಪರಿಪಾಲಿಸುತ್ತಾ ಬಂದಿವೆ. ಇದು ರಂಗಸಂಸ್ಕೃತಿಯ ಮಹೋನ್ನತ ಪ್ರೇಕ್ಷಕ ಪರಂಪರೆಗೆ ಸಲ್ಲುವ ಗೌರವ **************************

ಪ್ರೇಕ್ಷಕ ಪರಂಪರೆಯ ಅನ್ನದಾತರು Read Post »

ಕಾವ್ಯಯಾನ

ಕಾಪಿಟ್ಟು ಕಾಯುತ್ತಾಳೆ

ಕವಿತೆ ಕಾಪಿಟ್ಟು ಕಾಯುತ್ತಾಳೆ ಶ್ರೀವಲ್ಲಿ ಶೇಷಾದ್ರಿ ಋತು ಋತುವಿಗೊಂದೊಂದು ಹೊಸತುಹೆಚ್ಚುಗಾರಿಕೆಯ ಬಿಚ್ಚಿಡುತ್ತಾಳೆ,ಅಚ್ಚರಿ ಹುಟ್ಟಿಸಿಬೆಚ್ಚಿಸುವ ಈಹುಚ್ಚಿಪೆಚ್ಚಾಗಿಸುತ್ತಾಳೆ ಹುಚ್ಚುಗಳ ಹೆಚ್ಚಿಸಿಮನದಿಚ್ಚೆಗಳ ಅಚ್ಚು ಹಾಕಿಸಿಟ್ಟುರಚ್ಚೆ ಹಿಡಿದು ಅಚ್ಚು ಮೆಚ್ಚಾಗಿಕೊಚ್ಚಿ ಹೋಗದ ಹಾಗೆ ಬಚ್ಚಿಟ್ಟುಕಾಪಿಟ್ಟು ಕಾಯುತ್ತಾಳೆ ಬೆಚ್ಚಗೆ ಕಳಚಿಟ್ಟ ಪೊರೆ ಮತ್ತೆ ಹಸಿರು ಕೊನರಿಹಸಿ ಕರಗ ಮಣ ಭಾರ ಹೊತ್ತುಚೀರಿ ಹಾರಿ ಮೇಲೆರಗೊ ಹನಿಯರಭಸ ಭರಿಸಿ ಝಾಡಿಸಿ ತೂರಿಎಲ್ಲೆ ಇರದೆಡೆ ಹರಿದು ಬರಿಯರಾಡಿಯನ್ನಪ್ಪಿ ಒಪ್ಪಿ ಮುತ್ತಿಕ್ಕಿ ದಿನ ರಾತ್ರಿಯಾಟಕ್ಕೆ ಅದರಿ ಬೆದರಿಗರಿ ಕೆದರಿ ಮತ್ತೊಮ್ಮೆ ಹೂವಾಗುತ್ತಾಳೆ ಬಟ್ಟ ಬಯಲಿನಲಿ ದೃಷ್ಟಿ ತಾಗುವ ಹಾಗೆಪರಿಪರಿಯ ನಿಲುವಾಭರಣ ಪೇರಿಸಿಹೆಜ್ಜೆಗೊಂದು ಗೆಜ್ಜೆ ಎದೆ ಛಲ್ಲೆನ್ನಿಸಿಬೆಳಕು ಬೆಳದಿಂಗಳ ಕಲಕಿ ಕುಲುಕಿತಿಂಗಳ ತಿಳಿಗೊಳವ ಮುಳುಗಿ ತೇಲಿಸಿಅಳುವ ಕಡಲಿಗೆ ನಗೆ ದೋಣಿ ಹಾಯಿಸಿಏನೂ ಅರಿಯದೆ ಮಂಜು ಮುಸುಕಿನಲಿಎಲ್ಲೊ ದಿಟ್ಟೆ ನೆಟ್ಟು ನಿಲ್ಲುವ ಈ ಹುಚ್ಚಿ. *******************************

ಕಾಪಿಟ್ಟು ಕಾಯುತ್ತಾಳೆ Read Post »

ಇತರೆ

ಕೊಂಕಣಿ ಕವಿ ಪರಿಚಯ

ಕೊಂಕಣಿ ಕವಿ ಪರಿಚಯ ಜೊಸೆಫ್ ಸಿದ್ದಕಟ್ಟೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಗ್ರಾಮದ ಶ್ರೀ ಜೊಸೆಫ್ ಸಿದ್ದಕಟ್ಟೆಯವರು ಮಂಗಳೂರಿನ ಕಾರ್ಮೆಲ್ ಚರ್ಚಿನ ಫಾದರ್ ಆಗಿ ಸೇವೆ ಸಲ್ಲಿಸುತಿದ್ದಾರೆ. ಬಹಳ ಚಿಕ್ಕ ವಯಸ್ಸಿನಿಂದಲೇ ಬರವಣಿಗೆಯಲ್ಲಿ ತನ್ನನ್ನು ತೊಡಗಿಸಿಕೊಂಡು, ಕೊಂಕಣಿಯ ಯುವ ಕವಿ ಜೊಸಿ ಸಿದ್ದಕಟ್ಟೆ ಎಂಬ ಕಾವ್ಯನಾಮದಿಂದ ಅತ್ಯಂತ ಪ್ರಭಾವಶಾಲಿಯಾಗಿ ಹೊರಹೊಮ್ಮಿದ್ದಾರೆ. ಕಿಟಾಳ್ ಪತ್ರಿಕೆಯ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ “ಕಿಟಾಳ್ ಯುವ ಪರಸ್ಕಾರ್” 2011 ರಲ್ಲಿ, ಇನ್ನೊಂದು ಪ್ರತಿಷ್ಠಿತ ಪ್ರಶಸ್ತಿಯಾದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ್, 2013 ರಲ್ಲಿ ಜೊಸಿ ಸಿದ್ದಕಟ್ಟೆಯವರಿಗೆ ಲಭಿಸಿದೆ. ಸಾಹಿತ್ಯ ರಚನೆಗಳು: “ಪಾವ್ಸಾದೋಣು” ಕವಿತಾ ಸಂಕಲನ (2008) “ಮೋರಾನ್ ಸಾಂಡ್ಲೆಲಿ ಪಾಕಾಂ” ಕವಿತಾ ಸಂಕಲನ (2011) “ಉಜ್ಯಾ ತುಜ಼ೆ ವೇಂಗೇಂತ್” ಕವಿತಾ ಸಂಕಲನ (2015) ಯೂಟರ್ನ್ ( ಅಂಕಣ ಬರಹಗಳ ಸಂಕಲನ) ಕಾಜುಲೊ ( ನ್ಯಾನೋ ಕತೆಗಳ ಸಂಕಲನ) ಕಲ್ವಾರಿರ್ ರಾಜಿ ಸಂಧಾನ. ಇವಿಷ್ಟೂ ಪುಸ್ತಕಗಳು ಪ್ರಕಟಗೊಂಡು ಓದುಗ ವಲಯದೊಳಗೆ ಪ್ರಸಿದ್ಧಿಯನ್ನು, ಅಪಾರ ಮನ್ನಣೆಯನ್ನು ಪಡೆದಿವೆ. ನಾಟಕ ರಚನೆ , ನಿರ್ದೇಶನಗಳಲ್ಲೂ ತನ್ನನ್ನು ತೊಡಗಿಸಿಕೊಂಡಿರುವ ಫಾ| ಜೊಸಿ ಸಿದ್ದಕಟ್ಟೆಯವರು ಸಾಹಿತ್ಯದ ಎಲ್ಲಾ ಪ್ರಾಕಾರಗಳಲ್ಲೂ  ಕೈಯಾಡಿಸಿ ಪರಿಣಿತಿಯನ್ನು ಪಡೆದಿದ್ದಾರೆ. ಉದಾ: ಹೈಕು, ಗಝಲ್, ಇತ್ಯಾದಿ. ಜೊಸಿ ಸಿದ್ದಕಟ್ಟೆಯವರ ಎರಡು ಕವಿತೆಗಳು ನಿಮ್ಮ ಓದಿಗಾಗಿ: ಮೊರಾನ್ ಸಾಂಡ್ಲಲಿಂ ಪಾಕಾಂ – ಕುಮೆರಿಂತ್ ಮೊರಾನ್ ಸಾಂಡ್ಲಲಿಂ ಪಾಕಾಂ ಆರಾವ್ನ್ ಆರಾವ್ನ್ ಹಾಡ್ಲಿಂ ಥೊಡಿಂ ಧಾಕ್ಟಿಂ, ಕಾಂಯ್ ಥೊಡಿಂ ವ್ಹಡ್ಲಿಂ ಆನಿ ತಾಣಿಂಚ್ ಆಮ್ಚಿಂ ಮನಾಂ ಫೊಡ್ಲಿಂ ಬಬ್ಲಾನ್ ಏಕ್ ಪಾಕ್ ಚೊರುನ್ ವೆಲೆಂ ಮಿತ್ರಾಂಕ್ ದಾಕವ್ನ್ ಹರ್ಧೆಂ ಫುಲಂವ್ಕ್ ಬಯ್ಯಾನ್ ವಿಚಾರಿನಾಸ್ತಾಂ ಲಿಪಯ್ಲೆಂ ಏಕ್ ಬುಕಾಪಾನಾಂ ಇಡ್ಯಾಂತ್ ಪಿಲಾಂ ಕಾಡುಂಕ್ ದಾಟ್ಟುಕೀ ಏಕ್ ಜಾಯ್ ಆಸ್ಲೆಂ ಚಾಂಪ್ಯಾವನಾಂತ್ ಆಪೊವ್ನ್ ಗುಪ್ತಿಂ ‘ತಾಕಾ’ ದೀವುಂಕ್ ವರದಕ್ಕ ವಿಚಾರಿ ಮ್ಹಣ್ ಮಾಮ್ಮಿನ್ ದಿಲೆಂ ಕಿಸ್ಣಾಚ್ಯಾ ಮಾತ್ಯಾಕ್ ಖೊವಂವ್ಕ್ ಮಾಗೀರ್ ಉರಲ್ಲಿಂ ಮ್ಹಾಕಾ ಮೊಡ್ಕುರಿಂ ಆನಿ ರಡ್ಕುರಿಂ ಖಂಯ್ಚ್ಯಾ ಕರ್ಮಾಕ್? ಕೊಣೆಂ ಫಾರ್ಲಿಂ, ಕೊಣೆಂ ಲಿಪಯ್ಲಿಂ ತಾಚೆರ್ ಸೊಧ್ ಹಾಂವೆಂ ಚಲಯ್ಲೊ ‘ಹಾಂವೆಂ ಹಾಡಲ್ಲಿಂ ಪಾಕಾಂ ತುಮಿ ಕಶಿಂ ಚೊರ್ಲಿಂ?’ ಬಯ್ಯಾ ಹಾಸ್ಲೆಂ ‘ಹಾಡಲ್ಲಿಂ ವ್ಹಯ್, ಪುಣ್ ಮೊರಾನ್ ಸಾಂಡ್ಲಲಿಂ!’ ದೊಳ್ಯಾ ಖಾಂಚಿಂತ್ಲಿಂ ದುಕಾಂ ಪುಸುನ್ ಭಾಯ್ರ್ ಯೆತಾನಾ ಬೋಳ್ ರುಕಾರ್ ಭಿಜಲ್ಲೊ  ಕಾವ್ಳೊ ಆಂಗ್ ಪಾಪ್ಡುಂಕ್ ಲಾಗ್ಲೊ ಥೆಂಬೆ ಉಸಾಳ್ಳೆಚ್ ತೊ ಸುಶೆಗಾತ್ ಉಬ್ಲೊ -ಜೊ. ಸಿ. ಸಿದ್ದಕಟ್ಟೆ “ನವಿಲು ತೊರೆದ ಗರಿಗಳು” ಬಯಲಲ್ಲಿ ನವಿಲು ತೊರೆದ ಗರಿಗಳನ್ನು ಆರಿಸಿ ಆರಿಸಿ ತಂದಿದ್ದೆ. ಕೆಲವು ಚಿಕ್ಕವು, ಇನ್ನು ಕೆಲವು ದೊಡ್ಡವು, ಆಮೇಲೆ .. ಅವೇ ನಮ್ಮ ಮನಗಳನ್ನು ಒಡೆದವು. ಬಬ್ಲು ಒಂದು ಕದ್ದೊಯ್ದ ಅವನ ಗೆಳೆಯರಿಗೆ ತೋರಿಸಿ ಎದೆ ಉಬ್ಬಿಸಲು, ಅಕ್ಕ ಕೇಳದೆ ಎತ್ತಿಟ್ಟಳು ಪುಸ್ತಕದ ನಡುವೆ ಮುಚ್ಚಿಟ್ಟು ಮರಿ ಮಾಡಲು, ಅಣ್ಣನಿಗೂ ಒಂದು ಗರಿ ಬೇಕಿತ್ತು ಸಂಪಿಗೆ ವನದ ಮರೆಯಲ್ಲಿ “ಅವಳಿಗೆ” ಕೊಡಲು, ವರದಕ್ಕ ಕೇಳಿದರೆಂದು ಅಮ್ಮ ಕೊಟ್ಟಳು ಅವರ ಕೃಷ್ಣನ ತಲೆಗೆ ಸಿಕ್ಕಿಸಲು, ಇನ್ನು ನನಗೆ ಉಳಿದದ್ದು ಬರೀ ಹರಿದವು ಮತ್ತು ಮುರಿದವು …. ಯಾವ ಕರ್ಮಕ್ಕೆ?? ಯಾರ‍್ಯಾರೋ  ಮುಚ್ಚಿಟ್ಟರು, ಎತ್ತಿಟ್ಟರು, ಕದ್ದೊಯ್ದರು.. ಜೋರಾಗಿ ಗದರಿಸಿದೆ ಕೋಪ ತಡೆಯದೆ “ನಾನು ತಂದ ಗರಿಗಳವು.. ಹೇಗೆ ಕದ್ದಿರಿ ನೀವು?” ಅಕ್ಕ ನಗುತ್ತ… “ನೀನು ತಂದಿದ್ದು ಹೌದು.. ಆದರೂ… ನವಿಲು ತಾನೇ ತೊರೆದಿದ್ದು..?” ಕಣ್ಣಂಚಿನ ದುಃಖವನ್ನು ಒರೆಸಿ ಹೊರಗೆ ಬಂದಾಗ ಬೋಳು ಮರದಲ್ಲಿ ಕೂತ ಕಾಗೆಯೊಂದು ಪಟಪಟನೆ ರೆಕ್ಕೆ ಬಡಿಯುತ್ತ ಹನಿಗಳುದುರಿಸಿ ಹಾರಿಹೋಯಿತು…. ನಿರಾಳವಾಗಿ. —ಶೀಲಾ ಭಂಡಾರ್ಕರ್. ರಾಜಿನಾಮೊ ಪಿಕ್ಕಾಸ್ ಆನಿ ಖೊರೆಂ ನವ್ಯಾನ್ ಡ್ಯೂಟೆಕ್ ಹಾಜಿರ್ ಜಾಲಿಂ, ಫುಲಾ ತೊಟಾಂತ್. ಡ್ಯೂಟೆಕ್ ಲಾಗ್‍ಲ್ಲ್ಯಾ ಪಿಕ್ಕಾಸಾನ್ ಮೋವ್ ಆಸ್ಲೆಕಡೆ ಖೊಂಡುಂಕ್ ಸುರು ಕೆಲೆಂ ಖೊಂಡ್ಚ್ಯಾ ಹುಮೆದಿನ್ ಆಡ್ ಮೆಳ್‍ಲ್ಲೊ ಉದ್ಕಾ ಪೈಪ್‍ಯೀ ಉಕ್ಲುನ್ ಘಾಲೊ ದುಸ್ರೆದಿಸಾ ‘ಚತ್ರಾಯೆಸಂಗಿಂ’ ಪಿಕ್ಕಾಸಾಕ್ ಮುರೊ ಖೊಂಡುಂಕ್ ‘ಡ್ಯೂಟಿ’ ಘಾಲಿ, ಎಕೆಕ್ ಘಾಸಾಕೀ ದಾಂತಾಥಾವ್ನ್ ಕಿಟಾಳಾಂ ಉಸ್ಳೊನ್ ಹಿಂಸಾ ಜಾತಾಲಿ, ತಿತ್ಲ್ಯಾಕ್‍ಚ್ ಪಿಕ್ಕಾಸಾನ್ ‘ರಾಜಿನಾಮೊ’ ದಿಲೊ. ಪಿಕ್ಕಾಸಾನ್ ಖೊಂಡುನ್ ಗೆಲ್ಲೆಕಡೆ ಖೊರ್‍ಯಾಕ್ ಡ್ಯೂಟಿ ಲಾಗ್ಲಿ ಮಾತಿ ವೊಡ್ಚಿ, ಹದಾ ಕರ್‍ಚಿ ಮ್ಹೆಳೆಂ ಶೆಣ್ ವೊಡುನ್ ಘಾಲ್ಚೆಂ.. ತಿಕಾಯ್ ಹಿಂಸಾ ಜಾತಾಲಿ ತೆಂ ವಾತಾವರಣ್‍ಚ್ ನಾಕಾ ಆಸ್ಲೆಂ.. ತರೀ, ಆಪ್ಣಾಕುಶಿಕ್‍ಚ್ ಯೇವ್ನ್ ಪಡ್ಚ್ಯಾ ಮೆಳ್ಯಾಮದೆಂಯ್ ಖೊರೆಂ ರಾವ್ಲೆಂ, ‘ಗುಲೊಬಾಚ್ಯಾ ಪರ್ಮಳಾಕ್ ಲಾಲೆವ್ನ್’ ರಾಜಿನಾಮೆ ಹಾರೆ ಮತ್ತು ಗುದ್ದಲಿಗಳೆರಡೂ ಹೊಸದಾಗಿ ಡ್ಯೂಟಿಗೆ ಸೇರಿದವು ಹೂವಿನ ತೋಟದೊಳಗೆ. ಡ್ಯೂಟಿಯಲ್ಲಿ ತೊಡಗಿದ ಹಾರೆಯು ಮೆತ್ತಗಿರುವಲ್ಲಿ ಅಗೆಯಲು ಆರಂಭಿಸಿತು. ಅಗೆಯುವ ಹುಮ್ಮಸ್ಸಿನಲ್ಲಿ ಅಡ್ಡ ಬಂದ ನೀರಿನ ಪೈಪನ್ನೂ ಬಗೆದು ಹಾಕಿತು. ಮರುದಿನ ಮತ್ತೆ ಹಾರೆಗೆ ಎಚ್ಚರದಿಂದ ಕೆಲಸಮಾಡಲು ಎಚ್ಚರಿಸಿ ಕಲ್ಲಿರುವ ಕಡೆ ಅಗೆಯುವ ಡ್ಯೂಟಿ ಬಿತ್ತು. ಒಂದೊಂದು ತುತ್ತಿಗೊಂದೊಂದು ಕಿಡಿಗಳು ಹಲ್ಲಿನಿಂದ ಸಿಡಿಯುವಾಗ ಭಾರೀ ಹಿಂಸೆ ಅನಿಸಿತು. ಅಷ್ಟಕ್ಕೇ ಹಾರೆಯು ರಾಜಿನಾಮೆ ಕೊಟ್ಟಿತು. ಹಾರೆ ಅಗೆದು ಹೋಗಿದ್ದ ಕಡೆ ಈಗ ಗುದ್ದಲಿಯ ಡ್ಯೂಟಿ ಬಂತು. ಮಣ್ಣು ಅಗೆಯುವುದು ಹದಗೊಳಿಸುವುದು, ಸೆಗಣಿ ಹಾಕಿ ಮಟ್ಟ ಮಾಡುವುದು. ಅದಕ್ಕೂ ಹಿಂಸೆಯೇ ಇದು. ಈ ವಾತಾವರಣವೇ ಬೇಡ ಅನಿಸುತಿತ್ತು. ಆದರೂ.. ತನ್ನ ಬುಡಕ್ಕೆ ಬಂದು ಅಂಟುವ ಗಲೀಜಿನ ನಡುವೆಯೂ ಗುದ್ದಲಿ ಅಲ್ಲಿಯೇ ನಿಂತಿತ್ತು.. “ಗುಲಾಬಿಯ ಪರಿಮಳದ ಹಂಬಲದಿಂದ” ಕನ್ನಡಕ್ಕೆ: ಶೀಲಾ ಭಂಡಾರ್ಕರ್. ——————————————————— ಫೋಟೊ ಆಲ್ಬಂ ***************************************************************** ಚಿತ್ರ-ಬರಹ ಶೀಲಾ ಭಂಡಾರ್ಕರ್

ಕೊಂಕಣಿ ಕವಿ ಪರಿಚಯ Read Post »

ಕಾವ್ಯಯಾನ

ರುಬಾಯಿಗಳು

ರುಬಾಯಿಗಳು ಪ.ನಾ.ಹಳ್ಳಿ.ಹರೀಶ್ ಕುಮಾರ್ ೧. ಮಂಕುತಿಮ್ಮನಾಗು ಕೂಡಿಡುವುದು ಬಿಡು ಜಿಪುಣನೆಂಬ ಹೆಸರು ತಪ್ಪೀತು.ಓದಿ ಜ್ಞಾನಿಯಾಗು, ಅಜ್ಞಾನಿಯೆಂಬ ಹಣೆಪಟ್ಟಿ ತಪ್ಪೀತು.ಎಲ್ಲರೊಡನೆ ಒಂದಾಗಿ ಡಿವಿಜಿಯ ಮಂಕುತಿಮ್ಮನಾಗು,ರೌರವ ನರಕ ಲೋಕದ ದರ್ಶನವಾದರೂ ತಪ್ಪೀತು. ೨.ಕರ್ಮ ಹುಲಿಯ ಹೊಟ್ಟೆಯೊಳಗುಟ್ಟಿ ಹುಲಿಯಾದೆವುಹಸುವಿನೊಟ್ಟೆಯೊಳಗುಟ್ಟಿ ಹಸುವಾದೆವುಮನುಷ್ಯನ ಹೊಟ್ಟೆಯೊಳಗುಟ್ಟಿದಾ ಕರ್ಮಕ್ಕೆ,ಹಿಂದೂ ಕ್ರೈಸ್ತ ಜೈನ ಮುಸಲ್ಮಾನರೆಂದಾದೆವು **************************

ರುಬಾಯಿಗಳು Read Post »

ಕಾವ್ಯಯಾನ

ಕೆಂಡದ ಕೋಡಿ

ಕೆಂಡದ ಕೋಡಿ ವಿಶಾಲಾ ಆರಾಧ್ಯ ಬೆಳದಿಂಗಳಿನ ರಂಗೋಲಿಯಲೂಚಿತ್ತದಲಿ ನೆತ್ತರಿನ ಚಿತ್ರಗಳು ಮೂಡಿಕತ್ತಲ ಗರ್ಭಕ್ಕಿಳಿದು ಬಸಿರಾಗುತ್ತವೆಸೂಜಿಯ ಮೊನೆಯಲ್ಲಿ ಹುಟ್ಟಿದಮತ್ಸರದ ಕನಸುಗಳುದ್ವೇಷದ ಕೋರೆಹಲ್ಲಿನೊಡನೆಕತ್ತಿಯ ಝಳಪಿನ ತಾಳದಲಿನರ್ತಿಸಲು ಹವಣಿಸುತ್ತವೆ!! ಪಕ್ಷಗಳ ದಾಟಿ ಮಾಸದಮಾಸಗಳಲಿ ಇಣುಕಿ ಕಣ್ಣಲ್ಲೇಕೆಂಡದ ಕೊಂಡ ನಿಗಿನಿಗಿಸಿಮಿನುಗಿ ಮನದ ರಸವನುಕೊತಕೊತನೆ ಕುದಿಸಿ ನಾನುನೀನಿನಮೇಲು ಕೀಳಿನ ಧರ್ಮಾಧರ್ಮದತುಪ್ಪವ ಸುರಿಸಿ ಅಗ್ನಿಗೊಂಡವಮತ್ತೆ ಬಾನ ಕೊನೆವರೆಗೂ ಉರಿಸಿಧಗಧಗಿಸುವ ಹುಚ್ಚು ಕೋಡಿಹರಿಯುತ್ತದೆ!! ಏರಿಯ ದಾಟಿದ ಮತ್ಸರದ ಝರಿಕೊರಳ ಸೀಳೆ ಕಿರುದನಿಗೂಎಡೆಗೊಡದೆ ನೆತ್ತರು ಹರಿದಾಡುತ್ತದೆಆ ನೆತ್ತರಲೇ ಕಾರ್ಕೋಟ ಬೀಜಗಳುಮೊಳಕೆಯೊಡೆಯುತ್ತವೆ ಮತ್ತೆ ಮತ್ತೆ

ಕೆಂಡದ ಕೋಡಿ Read Post »

ನಿಮ್ಮೊಂದಿಗೆ

ಕರೋನಾ ಮತ್ತು ಭಯ ಜ್ಯೋತಿ ಡಿ.ಬೊಮ್ಮಾ ಭಯ ಬೇಡ ಎಚ್ಚರಿಕೆ ಇರಲಿ ಎಂದು ಹೇಳುತ್ತಲೆ ಈಗ ಪ್ರತಿಯೊಬ್ಬರ ಮನದಲ್ಲೂ ಕರೋನಾ ಬಗ್ಗೆ ಭಯ ಮನೆಮಾಡಿದೆ. ಮೇಲೆ ಇದೊಂದು ಸಾಮಾನ್ಯ ಕಾಯಿಲೆ ಎಂದುಕೊಂಡರೂ ಒಳಗೋಳಗೆ ಆತಂಕ ಪಡದವರಿಲ್ಲ.ರೋಗಕ್ಕಿಂತಲೂ ಅದರ ಸುತ್ತಲೂ ಇರುವ ಕ್ಲಿಷ್ಟಕರ ಕಾನೂನುಗಳು ಭಯವನ್ನು ಹೆಚ್ಚಿಸುತ್ತಿವೆ. ಸದ್ಯ ಕರೋನಾ ದಿಂದಾಗುವ ಸಾವಿನ ಪ್ರಮಾಣದಲ್ಲಿ ವಯಸ್ಸಾದವರೆ ಹೆಚ್ಚು. ಅವರಿಗೆ ಮತ್ತೆ ಬೇರೆ ಆರೋಗ್ಯ ಸಮಸ್ಯಗಳು ಇರಬಹುದು.ಬಹಳಷ್ಟು ಸಾವು ಆಸ್ಪತ್ರೆಯಲ್ಲಿ ಅಡ್ಮೀಟ್ ಆದ ಮೇಲೆ ಸಂಭವಿಸುತ್ತಿವೆ. ಅಡ್ಮಿಟ್ ಆದ ಮೇಲೆ ರೋಗಿ ತಮ್ಮ ಆತ್ಮವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಕರೋನಾ ರೋಗದ ಹೆಸರಿನಿಂದಲೇ ಮನೊಸೈರ್ಯ ಕುಸಿಯುತ್ತಿದೆ. ಹೊರಗೆ ರಾಜಾರೋಷವಾಗಿ ಓಡಾಡುವವರು ಕರೋನಾ ಬಂದ ತಕ್ಷಣ ಭಯಭೀತರಾಗುತ್ತಿದ್ದಾರೆ.Quarantine ಭಯದಿಂದ ಎಷ್ಟೋ ಜನರು ರೋಗ ಲಕ್ಷಣಗಳಿದ್ದರು ಪರಿಕ್ಷೆ ಮಾಡಿಸಿಕೊಳ್ಳದೆ, ರೋಗ ಉಲ್ಫಣಗೊಂಡಮೇಲೆ ಆಸ್ಪತ್ರೆಗೆ ದೌಡಾಯಿಸುತ್ತಾರೆ.ಅಷ್ಟರಲ್ಲಿ ಸೋಂಕು ವ್ಯಾಪಿಸಿ ಮರಣ ಸಂಭವಿಸಬಹುದು. ಭಯಕ್ಕೆ ಮತ್ತೊಂದು ಕಾರಣ ರೋಗದ ಸಂದರ್ಬದಲ್ಲಿ ತಮ್ಮವರಾರು ತಮ್ಮ ಬಳಿ ಇರದೆ ಒಬ್ಬಂಟಿಯಾಗಿ ಆಸ್ಪತ್ರೆಯಲ್ಲಿ ಇರಬೇಕಾದ ಸಂದರ್ಭ ಬಂದಾಗ ರೋಗಿ ತನ್ನ ಆತ್ಮಸೈರ್ಯ ಕಳೆದುಕೊಳ್ಳುತ್ತಾನೆ. ಅನಾಥ ಪ್ರಜ್ಞೆ ಯಿಂದ ಖಿನ್ನತೆಗೊಂಡು ರೋಗ ನೀರೋಧಕ ಶಕ್ತಿ ಕುಂಠಿತಗೊಂಡು ಚಿಕಿತ್ಸೆ ದೇಹಕ್ಕೆ ಪ್ರತಿಕ್ರಿಯಿಸಲಾರದು.ಇನ್ನೊಂದು ಭಯ ಆಸ್ಪತ್ರೆಯ ವೈದ್ಯರು ಸಿಬ್ಬಂದಿಗಳು ದೂರದಿಂದಲೇ (ತುರ್ತು ಸಂದರ್ಬ ಹೊರತು ಪಡಿಸಿ) ರೋಗಿಗಳೊಂದಿಗೆ ಸ್ಪಂದಿಸುವದರಿಂದ ರೋಗಿ ಕುಗ್ಗುತ್ತಾನೆ.ರೋಗ ಬೃಹದಾಕಾರವಾಗಿ ಕಾಡತೋಡಗುತ್ತದೆ. ಇನ್ನೂ ಕರೋನಾ ರೋಗಿಗಳು ಮನೆಯಲ್ಲಿದ್ದುಕೊಂಡೆ ಆರೈಕೆ ಮಾಡಿಕೊಳ್ಳಲು ಸರ್ಕಾರ ಅನುವು ಮಾಡಿಕೊಟ್ಟಿರುವದು ಸಮಧಾನಕರವೆ. ಆದರೆ ಮನೆಯವರು ರೋಗಿಯೊಂದಿಗೆ ಪ್ರೀತಿಯಿಂದ ಕಾಳಜಿಯಿಂದ ನೊಇಡಿಕೊಳ್ಳಬೇಕು.ಅವರಿಂದ ನಮಗೆಲ್ಲಿ ಹರಡುವದೊ ಎಂದು ರೋಗಿಯನ್ನು ಅನಾದರ ಮಾಡಿದರೆ ರೋಗಿ ನಿರಾಶೆಯಿಂದ ಕುಗ್ಗಬಹುದು.ರೋಗಿಯೊಂದಿಗೆ ಕೆಲದಿನ ದೈಹಿಕ ಅಂತರವಿಟ್ಟುಕೊಂಡು ಅವರನ್ನು ಆರೈಕೆ ಮಾಡಬಹುದು. ತಮ್ಮವರ ಪ್ರೀತಿ ಅಂತಃಕರಣ ದಿಂದಲೇ ರೋಗ ಗುಣಮುಖವಾಗಬಹುದು. ಹಾಗಾದರೆ ಈ ಭಯದ ಮೂಲ ಶುರುವಾದದ್ದು ಎಲ್ಲಿಂದ..? ರೋಗ ಬಂದರೆ ಸಾವು ಖಚಿತ ಎಂದು ನಂಬಿದ್ದರಿಂದ ,ಅಥವಾ ತಾವೇ ಅಂತಹ ಸಂದರ್ಬ ನೋಡಿದ್ದರಿಂದ ಇರಬಹುದು.ಇನ್ನೊಂದು ಈ ರೋಗ ತಮ್ಮವರಿಂದ ಪ್ರತ್ಯಕಗೊಳಿಸುತ್ತದೆ ಎಂಬ ದುಗಡ ..ಆಸ್ಪತ್ರೆಯಲ್ಲಿ ವೈದ್ಯರು ದೂರದಿಂದಲೆ ತಮ್ಮ ಕರ್ತವ್ಯ ನಿರ್ವಹಿಸುವ ರೀತಿಯಿಂದ..ರೋಗ ಬಂದಮೇಲೆ ಗುಣಮುಖ ವಾಗುವದೋ ಇಲ್ವೋ ಎಂಬ ಆತಂಕ..ರೋಗ ಲಕ್ಷಣಗಳು ಕಂಡುಬಂದರೆ ಪರೀಕ್ಷೆ ಮಾಡಿಸಬೇಕೋ ಬೇಡವೂ ಎಂಬ ಇಬ್ಬಂದಿತನ..ರೋಗ ದೃಢ ಪಟ್ಟರೆ ಅಕ್ಕಪಕ್ಕದ ಮನೆಯವರ ನಿರಾದರ..ಇಂತಹ ಎಲ್ಲಾ ಸಂದರ್ಬಗಳು ಭಯ ಹೆಚ್ಚಾಗಲು ಕಾರಣವಾಗುತ್ತಿವೆ. ಉದ್ಯೋಗಸ್ಥರು ಭಯಮುಕ್ತರಾಗಿ ನಿರಾಂತಕವಾಗಿ ಕಾರ್ಯನಿರ್ವಹಿಸದಂತಾಗಿದೆ.ಹೋರಗೆ ಹೋದರೆ ಎಲ್ಲಿ ಸೋಂಕು ತಗಲುವದೋ ಎಂಬ ದುಗುಡದಲ್ಲೆ ಕಾರ್ಯೋನ್ಮುಖರಾಗಬೇಕಾಗಿರುವದು ಅನಿವಾರ್ಯ. ಮಕ್ಕಳಂತೂ ಶಾಲೆಯೆ ಮರೆತಂತಾಗಿದ್ದರೆ.ಎಲ್ಲಿ ನೋಡಿದ್ದರು ರೋಗ ಮತ್ತು ಭಯದ್ದೆ ವಿಜೃಂಬಣೆ.ಎಲ್ಲವೂ ಅಯೋಮಯ. ಒಂದಂತೂ ಸತ್ಯ ,ರೋಗ ಗೆಲ್ಲಬೇಕಾದರೆ ಆತ್ಮಸೈರ್ಯ ಅತ್ಯಂತ ಮುಖ್ಯ.ಆದರೆ ಈ ಸಂದರ್ಬದಲ್ಲಿ ಬಹುತೇಕ ಜನ ಅದನ್ನೇ ಕಳೆದುಕೊಳ್ಳುತ್ತಿದ್ದಾರೆ.ಕರೋನಾ ಬಂದು ಗುಣಮುಖರಾದವರು ಉತ್ಸಾಹ ಭರಿತರಾಗಿರದೆ ಯಾವದೇ ಖಿನ್ನತೆಯಿಂದ ಬಳಲುವರಂತೆ ಕಾಣುತಿದ್ದಾರೆ.ಎಕೆಂದರೆ ರೋಗದ ಭಯ ಅಷ್ಟೊಂದು ಆವರಿಸಿಕೊಂಡಿದೆ. ಈಗ ಇದರೊಂದಿಗೆ ಬದುಕುವದು ಅನಿವಾರ್ಯ. ಯಾವಾಗಾದರೂ ಒಮ್ಮೆ ಬರುತ್ತದೆ ಎಂದಿಟ್ಟುಕೊಳ್ಳೊಣ.ಭಯ ಪಡದೆ ಹಿಂದೆ ಅನೇಕ ಸಲ ಬಂದು ಹೋದ ನೆಗಡಿ ಕೆಮ್ಮನ್ನೆ ನೆನಸಿಕೊಂಡು ಹಗುರವಾಗಿ ತೆಗೆ್ಉಕೊಳ್ಳಬೇಕು.ಭಯ ಪಟ್ಟಷ್ಟು ರೋಗದ ತೀವ್ರತೆ ಹೆಚ್ಚುತ್ತದೆ.ಈಗ ನಮ್ಮ ಮುಂದಿರುವ ದೊಡ್ಡ ಸವಾಲೆಂದರೆ ಕರೋನಾ ರೋಗಕ್ಕೆ ಭಯಪಡದೆ ಇರುವದು.ಆತ್ಮವಿಶ್ವಾಸ ಗಟ್ಟಿಗೋಳಿಸುವ ನಿಟ್ಟಿನಲ್ಲಿ ಸಕಾರಾತ್ಮಕ ಆಲೋಚನೆಗಳು ಮತ್ತು ಸ್ವಲ್ಪ ಮಟ್ಟಿನ ಯೋಗ ಮತ್ತು ದ್ಯಾನಗಳು ಅತ್ಯವಶ್ಯಕ. ****************************** .

Read Post »

ಅಂಕಣ ಸಂಗಾತಿ, ಹೊಸ ದನಿ-ಹೊಸ ಬನಿ

ಸಹಜ ನಡಿಗೆಯ ರುದ್ರ ನರ್ತನದ ಭಾವಗಳಂತೆ ಕುಮಾರ್ ಹೊನ್ನೇನಹಳ್ಳಿ‌ ಪದ್ಯಗಳು . ಕುಮಾರ್ ಹೊನ್ನೇನಹಳ್ಳಿ ವೃತ್ತಿಯಿಂದ ಶಿಕ್ಷಕ ಮತ್ತು ಶಿಕ್ಷಕರ ತರಬೇತುದಾರ ಅಂದರೆ ರಿಸೋರ್ಸ್ ಪರ್ಸನ್. ಅವರ ವೃತ್ತಿಯ ಕಾರಣ ಅಂದರೆ ಸಂಪನ್ಮೂಲ ವ್ಯಕ್ತಿಯಾಗಿರುವ ಕಾರಣ ಜಗತ್ತಿನ ಸಮಸ್ತ ಆಗು ಹೋಗುಗಳ ಅರಿವು ಮತ್ತು ಅಂಥ ಸಂಗತಿಗಳು ಒಟ್ಟೂ ಸಮಾಜದ ಮೇಲೆ ಬೀರುವ ಪರಿಣಾಮಗಳನ್ನೂ ಪ್ರಮಾಣಗಳನ್ನೂ ಆನುಷಂಗಿಕವಾಗಿ ಅವರು ಪ್ರಸ್ತಾಪಿಸದೇ ಅನ್ಯ ಮಾರ್ಗಗಳು ಇರುವುದಿಲ್ಲ. ಹಾಗಾಗಿಯೇ ಏನೋ ಇವರ ಕವಿತೆಗಳಲ್ಲಿ ಐತಿಹಾಸಿಕ ವ್ಯಕ್ತಿಗಳೂ ವರ್ತಮಾನದ ಸಂಗತಿಗಳೂ ಆಗೀಗ ಬೇರೆ ಬೇರೆಯದೇ ರೂಪದಲ್ಲಿ ಭೇಟಿಯಾಗುತ್ತಲೇ ಇರುತ್ತವೆ. ಇವರ ಎಫ್ಬಿ ಖಾತೆಯಲ್ಲಿ  Kumara h c holenarsipur  ಎಂದಿದೆ. ಎಫ್ಬಿಯ ಅಸಂಖ್ಯಾತ ಪೋಸ್ಟುಗಳ ನಡುವೆ ದಿನಕ್ಕೊಮ್ಮೆಯಾದರೂ ಹಣಕುವ ಲೈಕೋ ಕಮೇಂಟೋ ಅಥವ ತಮ್ಮದೇ ಪಟಗಳನ್ನೇ ತೇಲಿ ಬಿಡುವವರ ನಡುವೆ ಸ್ವಲ್ಪ ಸೀರಿಯಸ್ ಆಗಿಯೇ ಪ್ರತಿಕ್ರಯಿಸುವ ಕುಮಾರ್ ತಮ್ಮ ಕವಿತೆಗಳಿಂದಲೂ ಆಗಾಗ ಕಾಣಿಸಿಕೊಳ್ಳುತ್ತಲೇ ಇರುತ್ತಾರೆ. ಕಳೆದ ಆರೇಳು ವರ್ಷಗಳಿಂದ ಕವನ ಕೃಷಿಗೆ ಕೈ ಹಾಕಿರುವ ಕುಮಾರ್ ಸದ್ಯ ಹುಣಸೂರಿನ ವಾಸಿ. “ಬೆಳಕಿನೆಡೆಗೆ” ಸಂಘಟನೆಯ ಮೂಲಕ ಹುಣಸೂರಿನಲ್ಲಿ ಸಾಹಿತ್ಯಾಸಕ್ತರ ಗುಂಪಿನ ಜೊತೆ ಒಡನಾಟ ಇಟ್ಟುಕೊಂಡಿರುವ ಇವರು ಶ್ರೀ ಅರವಿಂದ ಚೊಕ್ಕಾಡಿಯವರ ಮಧ್ಯಮಪಂಥದ ಬೆಂಬಲಿಗ. ಶಿಕ್ಷಣಕ್ಕೆ ಸಂಬಂಧಿಸಿದ ಹಲವು ಲೇಖನಗಳನ್ನು ಡಯಟ್ ಮೈಸೂರಿನ ಮೂಲಕ ಪ್ರಕಟಿಸಿರುವ ಇವರುಯಾವುದೇ ಲೇಖನ ಕವನಗಳನ್ನು ಉಳಿದಂತೆ  ಯಾವುದೇ ಪತ್ರಿಕೆಗೂ ಕಳುಹಿಸಿಲ್ಲ ಎಂದು ಹೇಳಿದಾಗ ಆಶ್ಚರ್ಯವಾಗದೇ ಇರದು. ಆದರೂ ಕವನ ಸಂಕಲನ “ಪ್ರಳಯವಾಗುತ್ತಿರಲಿ..” ಪ್ರಕಟಿಸಿದ್ದಾರೆ. ಯಾವ ಪತ್ರಿಕೆಗೂ ಬರೆಯದೆ ಬರಿಯ ಫೇಸ್ಬುಕ್ಕಿನ ಮೂಲಕವೇ ಕವಿತೆ ಪ್ರಕಟಿಸುವ ಶ್ರೀಯುತರ ಸಂಕಲನ ನಾನು ನೋಡದೇ ಇದ್ದರೂ ಅವರ ಫೇಸ್ಬುಕ್ ಕವಿತೆಗಳ ಮೂಲಕವೇ ಅವರೊಳಗಿನ ಕವಿಯ ಭಾವವನ್ನು ಆ ಕವಿಯು ಸಮಾಜದ ನಡವಳಿಕೆಗಳ ಮೇಲೆ ಇರಿಸಿ ಕೊಂಡಿರುವ ನೈತಿಕ ಸಿಟ್ಟನ್ನೂ ಅರಿಯಬಹುದು. ಶ್ರೀ ಕುಮಾರ್ ಅರವಿಂದ ಚೊಕ್ಕಾಡಿಯವರ ಮಧ್ಯಮ ಪಂಥದ ಸಹವರ್ತಿಯೂ ಆಗಿರುವ ಕಾರಣ ಅವರ ನಿಲುವು ಎಡವೂ ಅಲ್ಲದ ಬಲಕ್ಕೂ ವಾಲದ ಆದರೆ ಸಾಮಾಜಿಕ ಸನ್ನಿವೇಶಗಳಿಗೆ ಆಯಾ ಸಂದರ್ಭಗಳ ಅಗತ್ಯತೆಗೆ ತಕ್ಕಂತೆ ಬಾಗುವುದನ್ನೂ ಬಳುಕುವುದನ್ನೂ ಹಾಗೆಯೇ ಬಗ್ಗದೇ ಸೆಟೆಯುವದನ್ನೂ ಈ ಕವಿತೆಗಳ ಅಧ್ಯಯನದಿಂದಲೇ ಅರಿಯಬಹುದು. ನಿಜದ ಕವಿಯು ನಿಜಕ್ಕೂ ಇಟ್ಟುಕೊಳ್ಳಲೇ ಬೇಕಾದ ನೈತಿಕತೆ ಇದುವೇ ಆಗಿದೆ. ಏಕೆಂದರೆ ಕವಿಯೂ ಮೂಲತಃ ಒಬ್ಬ ಮ‌ನುಷ್ಯ. ಅವನಿಗೂ ಎಲ್ಲರ ಹಾಗೆ ಬದುಕಿನ ಸವಾಲುಗಳು, ಸಾಲ ಸೋಲಗಳು, ಸೋಲು ಗೆಲವುಗಳು, ನೈತಿಕತೆಯನ್ನು ಪ್ರಶ್ನಿಸುತ್ತಲೇ ಅನೈತಿಕತೆಗೆ ಎಳೆಸುವ ಪ್ರಲೋಭನೆಗಳು ಈ ಎಲ್ಲವನ್ನೂ ಕವಿಯೂ ಅನುಭವಿಸುತ್ತಲೇ ಇರುತ್ತಾನೆ ಮತ್ತು ಆ ಅಂಥ ಸಂದರ್ಭಗಳಲ್ಲಿ ಎಲ್ಲ ಸಾಮಾನ್ಯರೂ ವರ್ತಿಸುವಂತೆಯೇ ವರ್ತಿಸಿರುತ್ತಾನೆ. ಆದರೆ ಕವಿಯಾದವನು ಆ ಅಂಥ ಅನುಭವವನ್ನು ತನ್ನದೇ ರೀತಿಯಲ್ಲಿ ಅಭಿವ್ಯಕ್ತಿಸಲು ಕವಿತೆಗೆ ಮೊರೆ ಹೋಗುತ್ತಾನೆ. ಮತ್ತು ತನ್ನ ಮುಂದಣ ಸವಾಲುಗಳಿಗೆ ಕವಿತೆಯ ಮೂಲಕವೇ ಉತ್ತರ ಕಂಡು ಕೊಳ್ಳುತ್ತಾನೆ. ಇದನ್ನು ಅವರ “ಸರದಿ” ಅನ್ನುವ ಕವಿತೆಯಲ್ಲಿ ನೀವೇನೋ ಬಿಡಿ ಆ ಕಡೆ ಆದರೂ ಸರಿ ಈ ಕಡೆ ಆದರೂ ಸರಿ ನಿಂತು ಬಿಡುವಿರಿ ಏನೂ ಮಾಡಲಾಗದ ಆ ಒಂದು ಗಳಿಗೆ ನೀವೂ ದಾಟಲೇಬೇಕು ಆಳ ಎಷ್ಟಿದ್ದರೂ ಹರವು ಹರವಿದ್ದರೂ ಕತ್ತಲಲಿ ಹೊರಟರೂ ಬೆಳಕಿನಲಿ ಹೊರಟರೂ ಒಪ್ಪಿ ನಡೆದರೂ ಒಪ್ಪದೆ ಇದ್ದರೂ…… (ಸರದಿ) ಈ ದ್ವಂದ್ವಗಳ ನಡುವೆಯೂ ಪಯಣವನು ಮುಂದಕ್ಕೆ ಸಾಗಿಸಬೇಕಲ್ಲ ಅನ್ನುವ ವ್ಯಥೆಯ ನಡುವೆಯೇ ಸರದಿಯಲ್ಲಿರುವ ನಾವು ನಮ್ಮಾಚೆ ಇನ್ನೂ ಯಾರೋ ಕಾಯುತ್ತಲೇ ಇದ್ದಾರೆ ಅನ್ನುವ ಅರಿವು ಇಲ್ಲಿ ಮುಖ್ಯ. ಮತ್ತು ಆ ಅದೇ ಭಾವವೇ ಈ ಕವಿತೆಯು ದ್ವಂದ್ವವನ್ನು ಗೆಲ್ಲುವ ಉಪಾಯ ಕಂಡುಕೊಂಡದ್ದು! ಈ ಕವಿ ವೃತ್ತಿಯಿಂದ ಶಿಕ್ಷಕ. ಹಾಗಾಗಿ ಪ್ರತಿ ವರ್ಷ ಫಲಿತಾಂಶದತ್ತಲೇ ದಿಟ್ಟಿ. ಅವರು ಹೇಳುತ್ತಾರೆ; ಉದುರಿದ ಎಲೆಗಳ ಗುಡಿಸದೆ ಕಳಿಯಲು ಬಿಟ್ಟಿದ್ದರೆ ತನ್ನದೇ ಬುಡದಲಿ? (ಉದುರಿದ ಎಲೆಗಳ ಗುಡಿಸಿ) ವರ್ತಮಾನದ ಶಿಕ್ಷಣ ವ್ಯವಸ್ಥೆಯನ್ನೂ ಅದು ಅಮೂಲಾಗ್ರವಾಗಿ ಬದಲಾಗಬೇಕಾದ ಅನಿವಾರ್ಯವನ್ನೂ ಹೇಳುತ್ತಿದ್ದಾರೆ ಅನ್ನಿಸಿತು. ಉದುರಿದ ಎಲೆಗಳನ್ನು ಗುಡಿಸಿ ಬಿಸಾಕುವ ಅಂದರೆ ಈಗಾಗಲೇ ಘಟಿಸಿದ ಐತಿಹಾಸಿಕ ಸಾಮಾಜಿಕ ಸನ್ನಿವೇಶಗಳನ್ನು ಕಲಿಕೆಯಲ್ಲಿ ಅಳವಡಿಸಿಕೊಳ್ಳದೇ ಕಡ ತಂದ ರಸ ಗೊಬ್ಬರ ಚಲ್ಲಿದರೆ ಅಂದರೆ ಆಧುನಿಕ ವಿದ್ಯಾಭ್ಯಾಸ ಕ್ರಮ(?) ನೆಲವನ್ನು ಬಂಜರು ಮಾಡುತ್ತಿದೆ ಅನ್ನುವ ಅರಿವು ಸ್ವತಃ ಅನುಭವದಿಂದಲೇ ಕಂಡು ಕೊಂಡ ಕಾಣ್ಕೆ. ” ಕಳೆದ ಆ ನನ್ನ ಮೊಗ” ಕವಿತೆಯು ಧೇನಿಸುವುದು ಸಾಮಾನ್ಯ ಸಂಗತಿಯನ್ನೇ ಆದರೂ ಅದು ಪಡೆಯುವ ನಿಲುವು ಸಾರ್ವತ್ರಿಕವಾಗಿ ಸತ್ಯವಾದುದೂ ಸತ್ವವಾಗಿಯೂ ಇರುವಂಥದು. ಮುಖವಾಡಗಳೊಳಗೇ ಏಗಬೇಕಿರುವ ನಮ್ಮೆಲ್ಲರ ಬದುಕನ್ನೂ ಈ ಕವಿ ಅತ್ಯಂತ ಯಶಸ್ವಿಯಾಗಿ ಹೀಗೆ ಅಭಿವ್ಯಕ್ತಿಸುತ್ತಾರೆ; ಅದೆಷ್ಟು ವರುಷಗಳಾದವು ಕನ್ನಡಿಯಲಿ ಅದೆಷ್ಟು ಮುಖಗಳು ಕಂಡವು ಅದು ನನ್ನದು ಅನ್ನುವ ಯಾವುದೋ ಏನೋ ಎಲ್ಲಾ ಅಯೋಮಯ ಮುಂದುವರೆದ ಪದ್ಯ ಕಡೆಯಲ್ಲಿ ಕಂಡುಕೊಳ್ಳುವ ಸತ್ಯ ಹೀಗೆ; ಅಲ್ಲಿಯವರೆಗೆ ಹೀಗೆ ಅನಿವಾರ್ಯ ಕನ್ನಡಿಯೊಳಗೆ ಕಾಣುವ ಸಾವಿರಾರು ಮುಖಗಳಲಿ ಸಿಕ್ಕ ಒಂದನು ಕಿತ್ತು ಭುಜಗಳ ಮೇಲೆ ಸಿಕ್ಕಿಸಿಕೊಂಡು … ಅಂದ ಮಾತ್ರಕ್ಕೆ ಇವರ ಎಲ್ಲ ಕವಿತೆಗಳೂ ಹೀಗೆ ಅನೂಹ್ಯಕ್ಕೆ ಸಲ್ಲುತ್ತವೆ ಎಂದೇನಲ್ಲ. ನಿಜಕ್ಕೂ ಅದ್ಭುತವಾಗಬಹುದಾಗಿದ್ದ “ನಾನು ಮತ್ತು ನನ್ನಂಥವರು” ಕವಿತೆ ಆರಂಭದಲ್ಲಿ ಹುಟ್ಟಿಸಿದ ಭರವಸೆಯನ್ನೂ (ಶೀರ್ಷಿಕೆ ಗಮನಿಸಿ) ಸಾಮಾನ್ಯ ಸಂಗತಿಯನ್ನೂ ಕವಿತೆಯ ವಸ್ತುವನಾಗಿಸುವ ಕ್ರಮವನ್ನೂ ಉದ್ದೀಪಿಸುತ್ತಲೇ ಅಂತ್ಯವಾಗುವ ವೇಳೆಗೆ ತೀರ ಸಾಮಾನ್ಯ ಹೇಳಿಕೆಯಾಗಿಬಿಡುವುದು ನಿರಾಶೆಯ ಸಂಗತಿ. ಇಂಥ ಹಲವು ಪಲಕುಗಳ ನಡುವೆಯೂ ಕವಿ ಅರಳಿ ಮತ್ತೆ ಹೊರಳುವುದು, ಅನೂಹ್ಯಕ್ಕೆ ತಡಕುವುದು ಕಾವ್ಯ ಕೃಷಿಯ ಪರಂಪರೆಯನ್ನು ಅರಿತವರಿಗೆ ತಿಳಿದ ಸಾಮಾನ್ಯ ಅಂಶ. ಏಕೆಂದರೆ ಇಂಥ ಪದ್ಯಗಳ ನಡುವೆ ಅಬ್ಬ ಎನ್ನುವ ಪ್ರತಿಮೆ ರೂಪಕಗಳನ್ನೂ ಈ ಕವಿ ನೀಡಬಲ್ಲರು. ಉದಾಹರಣೆಗೆ “ಪ್ರಶ್ನೆಗಳು” ಕವಿತೆಯ ಈ ಸಾಲು ನೋಡಿ; ಬಲಹೀನ ನಿಜ ಬಲಹೀನ ಸುಳ್ಳು ಎರಡನ್ನೂ ಹೇಳುವುದಿಲ್ಲ ನಿನ್ನೆದುರು ಹೇಳು ಗೆಳೆಯ ‘ನಿಜ’ವೆಂದರೆ ಏನು? ‘ಸುಳ್ಳು’ ಅದರ ವಿರುದ್ಧ ಪದವೆ? ಓಡುವ ಕಾಲದ ಜತೆಜತೆಗೆ ಓಡುವಾಗ ಯಾವುದು ನಿನ್ನ ಮುಂದಿನ ಕಾಲು ಹಿಂದಿನ ಕಾಲು? ಹೀಗೆ ಪ್ರಶ್ನೆಗಳಿಗೆ ಉತ್ತರವನ್ನು ತಡಕದೆಯೇ ಇದ್ದರೆ ಆ ಕವಿ ಬರಿಯ ಹೇಳಿಕೆ ಕೊಟ್ಟಾನು. ಹೇಳಿಕೆ ಮತ್ತು ಘೋಷಣೆಗಳನ್ನು ಬಿಟ್ಟುಕೊಟ್ಟ ಅನುಭವಗಳ ಸಹಜ ಅಭಿವ್ಯಕ್ತಿ ಮಾತ್ರ ಕವಿತೆಯಾಗಿ ಅರಳುತ್ತದೆ ಮತ್ತು ಬಹುಕಾಲ ಓದುಗನ ಮನಸ್ಸಿನಲ್ಲಿ ನಿಲ್ಲುತ್ತದೆ. ಈಗ ಈವರೆಗೂ ಈ ಕವಿ ಪ್ರಕಟಿಸಿರುವ ಕವಿತೆಗಳಲ್ಲೆಲ್ಲ ಬಹುವಾಗಿ ನನ್ನನ್ನು ಕಾಡಿದ ಮತ್ತು ಎಲ್ಲ ಸಹೃದಯರ ಮನಸ್ಸಿನಲ್ಲೂ ಉಳಿಯಬಹುದಾದ ರಚನೆಯೆಂದರೆ ಸದ್ಯದ ರಿಯಲ್ ವರ್ಲ್ದ್ ಮತ್ತು ವರ್ಚುಯಲ್ ವರ್ಲ್ದ್ ಗಳ ನಡುವಣ ಅಘೋಷಿತ ಯುದ್ಧದ ಪರಿಣಾಮ. ಆ ಪದ್ಯದ ಶೀರ್ಷಿಕೆ “ಹುಚ್ಚು ಹುಚ್ಚಾಗಿ”. ಸರಕು ಇರದ ಸಂತೆಯಲಿ ಬರೀ ಮಾತು ಮಾಹಿತಿ….. ಎಂಥ ವಿಪರ್ಯಾಸದ ಮಾತಿದು? ಸರಕೇ ಇಲ್ಲದ ಸಂತೆಯಲಿ ಮಾರಲೇನಿದೆ? ಕೊಳ್ಳಲೇನಿದೆ? ಇಂಥ ಅದ್ಭುತ ರೂಪಕಗಳನ್ನು ನಿಜ ಕವಿಯು ಮಾತ್ರ ಸೃಷ್ಟಿಸಬಲ್ಲ. ಈ ಮೊದಲೇ ಹೇಳಿದಂತೆ ಫೇಸ್ಬುಕ್ ಕವಿಗಳು ತಮ್ಮ ಪಟಗಳ ಲೈಕು ಕಮೆಂಟುಗಳಲ್ಲಿ ಕಳೆದು ಹೋಗುತ್ತಿರುವಾಗ ನಿಜಕ್ಕೂ ಹೌದೆನ್ನಿಸುವ ಈ ರೂಪಕ ಸೃಷ್ಟಿಸಿದ ಕುಮಾರ್ ಕವಿತೆಯನ್ನು ಮೆಚ್ಚದೇ ಇರುವುದು ಅಸಾಧ್ಯ. ಪದ್ಯದ ಕೊನೆ ಹೀಗಿದೆ; ಸುಮ್ಮನಿರಬೇಕು ಎಂದುಕೊಂಡರೂ ಹೆಂಡತಿ ಬಿಡುವುದಿಲ್ಲ ಮಗ ಕೇಳುತ್ತಾನೆ “ಅಪ್ಪಾ, ಕುಪ್ಪಳಿಸಿದರೆ ತಪ್ಪೇನು?” ಕುಪ್ಪಳಿಸುವುದ ನೋಡುತ್ತ ನಾನೂ ಕುಪ್ಪಳಿಸುತ್ತ ಅವಳ ಕರೆಗೆ ಓಗೊಟ್ಟು… ಹಿಮಾಲಯಕ್ಕೆ ಹೋಗುವುದು ಕನಸು ಬಿಡಿ. ವಾಹ್, ವಾಸ್ತವದ ಉರುಳಲ್ಲಿ ನರಳುತ್ತಿರುವ ಮತ್ತು ಮತ್ತೇನೋ ಕನಸುವ ಎಲ್ಲರಲ್ಲೂ ಈ ಭಾವನೆ ಇರದೇ ಉಂಟೇ? ಕುಮಾರ್ ಅವರ “ಪ್ರಳಯವಾಗಲಿ” ಸಂಕಲನ ನಾನು ಓದಿಲ್ಲ‌. ಪ್ರಾಯಶಃ ಅವರ ಇಂಥ ಪದ್ಯಗಳು ಆ ಸಂಕಲನದಲ್ಲಿ ಇರಲಾರವು. ಹತ್ತು ಹೆರುವುದಕ್ಕಿಂತ ಮುತ್ತ ಹೆರಬೇಕು ಎನ್ನುವುದು ಆಡುಮಾತು. ಅಂತೆಯೇ ಈ ಕವಿ ಹತ್ತು ಜಾಳು ಪದ್ಯ ಹಿಸೆಯುವ ಬದಲು ಒಂದು ರೂಪಕ ಸೃಷ್ಟಿಸುವ ಕೆಲಸಕ್ಕೆ ಕೈ ಹಾಕಲಿ ಎರಡನೆಯ ಸಂಕಲನ ತರುವ ಮನಸ್ಸು ಮಾಡಲಿ ಎನ್ನುವ ಹಾರೈಕೆಯೊಂದಿಗೆ ಅವರ ಐದು ಕವಿತೆಗಳನ್ನು ನಿಮ್ಮೆಲ್ಲರ ಓದಿಗಾಗಿ ಶಿಫಾರಸು ಮಾಡುತ್ತಿದ್ದೇನೆ. ಕುಮಾರ್ ಹೊನ್ನೇನಹಳ್ಳಿಯವರ ಕವಿತೆಗಳು ೧. ಸರದಿ ನೀವೇನೋ ಬಿಡಿ ಆ ಕಡೆ ಆದರೂ ಸರಿ ಈ ಕಡೆ ಆದರೂ ಸರಿ ನಿಂತು ಬಿಡುವಿರಿ ಏನೂ ಮಾಡಲಾಗದ ಆ ಒಂದು ಗಳಿಗೆ ನೀವೂ ದಾಟಲೇಬೇಕು ಆಳ ಎಷ್ಟಿದ್ದರೂ ಹರವು ಹರವಿದ್ದರೂ ಕತ್ತಲಲಿ ಹೊರಟರೂ ಬೆಳಕಿನಲಿ ಹೊರಟರೂ ಒಪ್ಪಿ ನಡೆದರೂ ಒಪ್ಪದೆ ಇದ್ದರೂ ಇವೆ ಕೆಲವು ನಿಮ್ಮಾತಿನ ವ್ಯಂಗ್ಯದಂತೆ ದಾಟುವ ಹೆಜ್ಜೆಗಳಿಗೆ ತಮ್ಮೆದೆಯನೇ ಹಾಸುವ ಕಡುಮೂರ್ಖ ಶಿಖಾಮಣಿಗಳು ಗೊತ್ತಿದೆ ಮಾತು ಮತ್ತು ಹೆಜ್ಜೆಗಳು ಸಿಗವು ಗಳಿಗೆ ದಾಟಿದ ಯಾವ ನಿಯಮಗಳಿಗೂ ಆದರೂ ನಿಮ್ಮಗಳ ವಜ್ಜೆ ಪಾದಗಳಿಗೆ ತಮ್ಮೆದೆಯನೇ ಹಾಸಿರುವ ಇವರುಗಳು ಹಾಗೆಯೆ, ತಡಮಾಡಬೇಡಿ ಯಾರಾದರೇನು ನೀವು, ದಾಟಿರಿ. ನಡೆದು ಬಂದ ಹಾದಿಯ ನೋಡಿದರೆ ಹಿಂದಿರುಗಿ ದಾಟಿರುವೆವು ನಾವೂ ನಮ್ಮ ಕನಸ ನನಸಿಗೆ ತಮ್ಮ ಕನಸುಗಳ ನಮ್ಮ ಕಾಲಡಿಗೆ ಹಾಸಿದ್ದವರ ಎದೆಗಳ ತುಳಿದು ಮುಗಿಯದ ಹಾದಿಯಲಿ ಮುಗಿಯಬಾರದು ಪಯಣವೂ ಬೇಕಾಗಿವೆ ಇನ್ನೂ ಸೇತುವೆಗಳು ಇದ್ದಾರೆ ಪಯಣಿಗರೂ ಈಗಲಾದರೂ ನುಡಿಯಬೇಕಲ್ಲವೆ ಮುಂಚೂಣಿಯಲಿ ನಿಂತಿರುವ ನಿಮ್ಮೆದೆ, ನಮ್ಮೆದೆ ‘ ಇನ್ನಾದರೋ ಸರದಿ ನಮ್ಮದೆ ‘. ೨. ಉದುರಿದ ಎಲೆಗಳ ಗುಡಿಸಿ ಮಾಗಿ ಕಾಲದಲ್ಲಿ ಮರ ಎಲೆ ಉದುರಿಸುವಂತೆ ಮಾತು, ಈ ಮಕ್ಕಳದ್ದು. ತಾಕೀತು ಮಾಡಿದ್ದೆ ” ಕೈ ಕಟ್ ಬಾಯ್ ಮುಚ್ “ ಮರದ ಬುಡದ ಸುತ್ತ ಉದುರಿದ್ದ ಎಲೆಗಳ ಗುಡಿಸಿ ಎಸೆದು ಪಾತಿ ಮತ್ತೊಮ್ಮೆ ಅಗೆದು ಸುರಿದೆ ರಸಗೊಬ್ಬರ, ಇನ್ನೇನಿದ್ದರೂ ಕೈತುಂಬಾ ಹಣ ಎಣಿಸುವ ಕನಸು. ಕೂಡಿ ಕೂರಿಸಿದ ಕೋಣೆಯೊಳಗೆ ಪಿಳಿಪಿಳಿ ನೋಡುವ ಮಕ್ಕಳು ಎಲ್ಲವ ನಾನೇ ಹೇಳುತ್ತಿರುವೆ ಸುಮ್ಮನೆ ಕೇಳುತ್ತಾ ಕಲಿಯಲು ಏನು ದಾಡಿ? ಯಾರು ಕೊಡುತ್ತಾರೆ ಇಷ್ಟು ಚನ್ನಾಗಿ ರಸಗೊಬ್ಬರ? ಕೇಳಿದಾಗ, ಹೇಳಿಕೊಟ್ಟಂತೆ ಉಲಿದಿದ್ದ ಈ ಗಿಳಿಗಳು ‘ ಹಾರಿ ತೋರಿ ‘ ಎಂದಾಗ ನಿಂತಿವೆ ಹಾಗೆ ಗೊಂದಲದಲಿ. ಸಾಕಲ್ಲವೆ ಕಾಲುಗಳು ಎಂದೇ ಕಟ್ಟಿ ಹಾಕಿದ್ದೆ ರೆಕ್ಕೆಗಳ. ರಸಗೊಬ್ಬರ ಉಂಡುಂಡ ಮಣ್ಣು ಈಗೀಗ ಬಂಜರು ಇಳುವರಿ ಇರಲಿ ಫಲ ಕಚ್ಚಿದರೆ ಸಾಕಾಗಿದೆ. ಉದುರಿದ ಎಲೆಗಳ ಗುಡಿಸದೆ ಕಳಿಯಲು ಬಿಟ್ಟಿದ್ದರೆ ತನ್ನದೇ ಬುಡದಲಿ? ೩. ಹೂವು ಮತ್ತು ಕಲ್ಲು ಹೂವಿಗೂ ಕಲ್ಲಿಗೂ ಮದುವೆ ಕರಗಿಸಿ ಮೃದು ಮಾಡಲು ಒದ್ದಾಡಿತು ಹೂವು ಕಲ್ಲು ಕಲ್ಲೇ ಮಿಸುಕಲಿಲ್ಲ ದಿನ ಕಳೆದ ಹಾಗೆ ಹೊಂದಿಕೊಂಡರೂ ನಲುಗಿ ನಲುಗಿ ಬಾಡಿ ಮಣ್ಣಾಯಿತು ಕಲ್ಲಿಗೇನು, ಗುಂಡಗೆ ನಿಂತಲ್ಲಿ ನಿಂತು ಕುಂತಲ್ಲಿ ಕುಂತು ಚಳಿ ಬಿಸಿಲಿಗೇ ಅಲುಗದವನು ಇನ್ನು ಈ ಹುಲು ಹೂವಿಗೆ ನಿಮಗೂ ಗೊತ್ತಿದೆ ನಮ್ಮಲ್ಲಿ ವಿಧುರನ ಲಗ್ನ ಸುಲಭ ಉಳಿಗೂ ಕಲ್ಲಿಗೂ ಮದುವೆ ಉಳಿಯ ಮುಂದೆ ಕಲ್ಲೇ ಮಿದು! ಉಳಿಯ ಒಂದೊಂದು ಪೆಟ್ಟಿಗೂ ನೋವಾದರೂ ಕಲ್ಲು ಕಲ್ಲೇ. ಈಗೇನೋ ಅದು ವಿಗ್ರಹವಂತೆ ನೀಡಿ ಉಳಿಗೆ ವಿಚ್ಛೇದನ ಪಡೆದು ದೀಕ್ಷೆ ನೆಲೆಸಿದೆಯಂತೆ ಗುಡಿಯೊಳಗೆ ಈ ಜನ ನೋಡಿ ಮತ್ತೆ ಮತ್ತೆ ಗುಡಿಗೆ ಹೂವುಗಳ ಹೊರುವುದು “ಕಲ್ಲಿಗೂ ಹೂವಿಗೂ”… ಕ್ಷಮಿಸಿ “ವಿಗ್ರಹಕೂ ಹೂವಿಗೂ”… ಅಲ್ಲಲ್ಲ  “ದೇವರಿಗೂ

Read Post »

ಅಂಕಣ ಸಂಗಾತಿ, ದಿಕ್ಸೂಚಿ

ಏಕಾಗ್ರತೆಯ ಬೆನ್ನೇರಿ ಗೆಲುವಿನ ನಗೆ ಬೀರಿ ಅಯ್ಯೋ! ನನ್ನ ಎಲ್ಲ ಕೆಲಸಗಳು ಅರ್ಧಂಬರ್ಧ. ಯಾವುದೂ ಪೂರ್ಣ ಮಾಡೋಕೆ ಆಗುತ್ತಿಲ್ಲ ಏಕಾಗ್ರತೆ ಇಲ್ಲದೇ ನನಗೆ ಅಡಚಣೆ ಆಗ್ತಿದೆ.ಇದನ್ನು ಸಾಧಿಸೋದು ಹೇಗೆ ತಿಳಿಯುತ್ತಿಲ್ಲ? ಎನ್ನುವುದು ಇತ್ತೀಚಿನ ಅನೇಕ ವಿದ್ಯಾರ್ಥಿಗಳ ಮತ್ತು ದಾವಂತದ ಬದುಕಿನಲ್ಲಿ ಕಾಲು ಹಾಕುತ್ತಿರುವ ಬಹುತೇಕ ಜನರ ದೊಡ್ಡ ದೂರು. ಏಕಾಗ್ರತೆಯಿಲ್ಲದೇ ಯಾವುದೇ ಕೆಲಸ ಮಾಡಲು ಆಗುವುದಿಲ್ಲ. ಹೀಗಾಗಿ ಎಲ್ಲದರಲ್ಲೂ ವೈಫಲ್ಯತೆಯ ನೋವು ಕಾಡುತ್ತದೆ. ಒತ್ತಡದ ಕೂಪದಲ್ಲಿ ಬಿದ್ದವರೆಲ್ಲ ಸುಲಭವಾಗಿ ಏಕಾಗ್ರತೆಯನ್ನು ಕಳೆದುಕೊಂಡು ನರಳುತ್ತಾರೆ. ಯಾವುದೇ ಒಂದು ನಿರ್ದಿüಷ್ಟ ಕೆಲಸದಲ್ಲಿ ತೀಕ್ಷ÷್ಣ ದೃಷ್ಟಿ ಹರಿಸಿ ಮುಂದುವರೆಯಬೇಕೆAದರೆ ಬೇಡವಾದ ನೂರಾರು ಆಲೋಚನೆಗಳು ಹರಿದಾಡಿ ಮನಸ್ಸನ್ನು ಎಲ್ಲೆಲ್ಲೋ ಕರೆದುಕೊಂಡು ಹೋಗಿ ಬಿಡುತ್ತವೆ. ನೆಪೋಲಿಯನ್ ಹೇಳಿದಂತೆ ಏಕಾಗ್ರತೆಯಿಂದ ಯಾವನು ಪ್ರಯತ್ನಿಸುವುದಿಲ್ಲವೋ, ಅವನು ಎಂದೂ ಯಶಸ್ಸು ಗಳಿಸಲಾರನು. ಇದು ಸರ್ವಕಾಲಿಕ ಸತ್ಯ. ಏಕಾಗ್ರತೆ ಸಾಧಿಸುವುದೆಂದರೆ ತನ್ನ ಕೆಲಸದಲ್ಲಿ ತನಗೆ ತಾನೇ ಸಹಾಯ ಮಾಡಿಕೊಳ್ಳುವುದು. ತನಗೆ ತಾನು ಸಹಾಯ ಮಾಡಿಕೊಳ್ಳದೆ ಯವುದೇ ವ್ಯಕ್ತಿ ಪ್ರಾಮಾಣಿಕವಾಗಿ ಇತರರಿಗೆ ಸಹಾಯ ಮಾಡಲು ಪ್ರಯತ್ನಿಸಲು ಸಾಧ್ಯವಿಲ್ಲ. ಎಂಬುದು ಈ ಜೀವನದ ಅತ್ಯಂತ ಸುಂದರ ಪರಿಹಾರಗಳಲ್ಲಿ ಒಂದು.ಏಕಾಗ್ರತೆ ಎಂದರೆ.. . . ?ದೈನಂದಿನ ಗಜಿಬಿಜಿ ಕೆಲಸಗಳು ನಮ್ಮ ಗಮನವನ್ನು ಅತಿ ಸುಲಭವಾಗಿ ಸೆಳೆಯುತ್ತಿರುವಾಗ ನಮ್ಮ ಆದ್ಯತೆಗಳತ್ತ ಗಮನ ಹರಿಸುವಂತೆ ಮಾಡುವುದೇ ಏಕಾಗ್ರತೆ. ಯಾವುದಾದರೂ ಒಂದು ಗುರಿಗೆ ಸಂಪೂರ್ಣ ದೃಷ್ಟಿ ನೆಡುವುದೇ ಏಕಾಗ್ರತೆ. .ಏಕಾಗ್ರತೆ ಸಾಧಿಸಲು ಈ ಸೂತ್ರಗಳನ್ನು ಅನುಸರಿಸಿ.ಒಂದು ಸಮಯಕ್ಕೆ ಒಂದೇ ಕೆಲಸಗುರಿಯ ಸಾಧನೆಗೆ ಮಾಡಲೇಬೇಕಾದ ಕೆಲಸಗಳು ಸಾಕಷ್ಟಿವೆ ಅವುಗಳಲ್ಲಿ ಯಾವುದನ್ನು ಮೊದಲು ಮಾಡುವುದು ಎಂಬ ಗೊಂದಲ ಇದ್ದೇ ಇರುತ್ತದೆ. ಹೀಗಾಗಿ ಆದ್ಯತೆಯ ಪ್ರಕಾರ ಕೆಲಸದ ಪಟ್ಟಿ ಮಾಡಿ ಮಹತ್ವದ ಕೆಲಸ ಅನಿವಾರ್ಯ ಕೆಲಸ ಪಟ್ಟಿಗಳನ್ನು ಮಾಡಿ ಅದರಲ್ಲಿ ನಿರ್ಧಿಷ್ಟ ಕೆಲಸವನ್ನು ಕೈಗೆತ್ತಿಕೊಳ್ಳಿ. ಎತ್ತಿಕೊಂಡಿರುವ ಕೆಲಸದ ಮೇಲೆ ಮಾತ್ರ ಗಮನ ಕೇಂದ್ರೀಕರಿಸಿ. ಹೀಗೆ ತದೇಕ ಚಿತ್ತದಿಂದ ತಲ್ಲೀನರಾಗಿ ಮಾಡಿದ ಕೆಲಸದ ಫಲಿತಾಂಶ ಅತ್ಯದ್ಭುತವಾಗಿರುತ್ತದೆ ಎಂದು ಬೇರೆ ಹೇಳಬೇಕಿಲ್ಲ. ಅತ್ತುತ್ತಮ ಗುಣಮಟ್ಟದ ಕಾರ್ಯ ಬೇರೆಯವರು ನಿಮ್ಮೆಡೆ ಹುಬ್ಬೇರಿಸುವಂತೆ ಮಾಡುವುದರಲ್ಲಿ ಸಂಶಯವಿಲ್ಲ. ಧ್ಯಾನಬೆಂಕಿಯಿAದ ಕಬ್ಬಿಣ ಮೃದುವಾಗುವಂತೆ ಧ್ಯಾನದಿಂದ ಏಕಾಗ್ರತೆ ಹದಕ್ಕೆ ಬರುತ್ತದೆ. ಮನುಷ್ಯನಿಗೆ ಉಸಿರಾಡಲು ಹೇಗೆ ಆಮ್ಲಜನಕವೋ ಹಾಗೆ ಗುರಿಯ ಸಾಧನೆಗೆ ಏಕಾಗ್ರತೆ ಅವಶ್ಯಕ. ಪ್ರತಿದಿನ ಧ್ಯಾನದಲ್ಲಿ ತೊಡಗಿಸಿಕೊಳ್ಳುವುದರಿಂದ ಏಕಾಗ್ರತೆ ಹೆಚ್ಚುತ್ತದೆ ಎನ್ನುವುದು ಈಗಾಗಲೇ ಸಂಶೋಧನೆಗಳಿAದ ಸಾಬೀತಾದ ಸಂಗತಿ. ಕ್ಷಣ ಕ್ಷಣಕ್ಕೂ ಹೊಯ್ದಾಡುವ ಮನಸ್ಸನ್ನು ಒಂದೆಡೆ ಹಿಡಿದಿಡಲು ಧ್ಯಾನ ಸಹಕಾರಿ. ದ್ಯಾನ ನಮ್ಮ ಧಾರಣ ಶಕ್ತಿಯನ್ನು ಹೆಚ್ಚಿಸುತ್ತದೆ. ಎಂಥ ಚಂಚಲ ಸ್ವಭಾವದವರಾದರೂ ಸರಿ ಜಾಗರೂಕರಾಗಿ ಮೈ ಕೊಡವಿಕೊಂಡು ನಿಲ್ಲುವಂತೆ ಮಾಡಲು ಧ್ಯಾನ ಸಹಾಯಕ ಬದುಕು ಒಂದು ಸುಂದರ ಗೆಲುವುಗಳ ಮುತ್ತಿನ ಹಾರ. ವಿವಿಧ ಬಣ್ಣಗಳ ಮುತ್ತಿನ ಹಾರ ಪಡೆಯಬೇಕೆಂದು ಬಯಸುವುದಾದರೆ ಧ್ಯಾನ ಅವಶ್ಯಕ. ನೆಪ ಬೇಡನಾನೂ ಏಕಾಗ್ರತೆಯಿಂದ ಚೆನ್ನಾಗಿ ಕೆಲಸ ನಿರ್ವಹಿಸಬೇಕು, ಅಧ್ಯಯನ ನಡೆಸಬೇಕು ಅಂತಿದ್ದೇನೆ ಆದರೆ ನನ್ನ ಮನೆಯ ವಾತಾವರಣ ಸರಿ ಇಲ್ಲ. ಗದ್ದಲಮಯ ಪ್ರದೇಶದಲ್ಲಿ ಚಿತ್ತವನ್ನು ಒಂದೆಡೆ ಕೇಂದ್ರೀಕರಿಸುವುದು ಕಷ್ಟವಾಗುತ್ತಿದೆ. ಎಂಬ ನೂರಾರು ನೆಪಗಳನ್ನು ಹೇಳದಿರಿ. ಕಷ್ಟಪಟ್ಟವನಿಗೆ ಸುಖ ಏನೆನ್ನುವುದು ತಿಳಿಯುತ್ತದೆ.ಮೊದಲು ಐದಾರು ನಿಮಿಷ ಮನಸ್ಸನ್ನು ಕೇಂದ್ರೀಕರಿಸುವುದು ಕಷ್ಟವೆನಿಸುತ್ತದೆ. ಮುಂದಿನ ಐದು ನಿಮಿಷ ಮನಸ್ಸನ್ನು ಸ್ವಾಧೀನದಲ್ಲಿರಿಸಿ ಗುರಿಯತ್ತ ನೆಟ್ಟರೆ ಸಾಕು. ಏಕಾಗ್ರತೆ ತಾನೇ ತಾನಾಗಿ ಹೊಂದಿಕೊಳ್ಳುತ್ತದೆ. ಏಕಾಗ್ರತೆಯ ಬಲದಿಂದ ಮಹಾನ್ ಕಾರ್ಯಗಳು ಸಂಭವಿಸಿವೆ. ಜೀವನದಲ್ಲಿ ನೀವು ಈಗ ಹೆಮ್ಮೆಯಿಂದ ಹೇಳಿಕೊಳ್ಳುವ ಅನೇಕ ಮಹತ್ಕಾರ್ಯಗಳು ಏಕಾಗ್ರತೆಯಿಂದಲೇ ಸಾಧಿಸಲ್ಪಟ್ಟಿವೆ ಸಂಕೀರ್ಣಮಯ ಜೀವನವನ್ನು ಸರಳಗೊಳಿಸಿ, ಶ್ರೇಷ್ಠ ಕೆಲಸಗಳಿಗೆ ಏಕಾಗ್ರತೆ ಮುನ್ನುಡಿಯಾಗುತ್ತದೆ. ಬದ್ಧತೆ ಬೆಳೆಸಿಕೊಳ್ಳಿನಮ್ಮ ಮೆದುಳು ಅದ್ಭುತ ಕಾರ್ಖಾನೆಯಿದ್ದಂತಿದೆ. ಒಂದು ಕೆಲಸ ಮಾಡುವಾಗಲೇ ಬೇರೆಲ್ಲ ಕೆಲಸಗಳ ಬಗೆಗೂ ಯೋಚಿಸಬಲ್ಲುದು ತರಕಾರಿ ಹೆಚ್ಚುತ್ತಿರುವ ತಾಯಿ ಹಾಲು ಉಕ್ಕದಂತೆ ನೋಡುತ್ತಾಳೆ. ಹೊರಗೆ ಯಾರೋ ಯಾವುದೇ ವಸ್ತು ಎಲ್ಲಿದೆ ಎಂದು ಕೇಳಿದರೂ ಸರಿಯಾಗಿ ಉತ್ತರಿಸುತ್ತಾಳೆ.ಮೆದುಳಿನ ಕಾರ್ಯದ ಬಗೆಗೆ ಅಚ್ಚರಿಯೆನಿಸುತ್ತದಲ್ಲವೇ? ಇಷ್ಟೆಲ್ಲ ಶಕ್ತಿ ಹೊಂದಿದ ಮೆದುಳಿಗೆ ಒಂದೇ ಕೆಲಸ ಕೊಟ್ಟರೆ ಇನ್ನೂ ಅಚ್ಚುಕಟ್ಟುತನದಿಂದ ಮಾಡಬಲ್ಲದು. ಸೂರ್ಯನ ಕಿರಣಗಳು ಕಾಗದವೊಮದನ್ನು ಸುಡಬಲ್ಲವು. ಆಶ್ಚರ್ಯವೇ! ಸೂರ್ಯನ ಕಿರಣಗಳನ್ನು ಒಂದೆಡೆ ಭೂತಗನ್ನಡಿಯಲ್ಲಿ ಕೇಂದ್ರೀಕರಿಸಿದಾಗ ಮಾತ್ರ ಸಾಧ್ಯ. ಚದುರಿದ ಕಿರಣಗಳಿಂದ ಅಸಾಧ್ಯ. ಮೆದುಳಿನ ಒಟ್ಟು ಶಕ್ತಿಯನ್ನುೆÆಂದು ಸಮಯದಲ್ಲಿ ಒಂದೇ ಕೆಲಸಕ್ಕೆ ಉಪಯೋಗಿಸುವ ಬದ್ಧತೆ ಬೆಳೆಸಿಕೊಳ್ಳಿ. ದಿನಚರಿ ಬರೆಯಿರಿನೀವು ಏನಾಗಬೇಕೆಂಬುದನ್ನು ಬೇರೆಯವರು ನಿರ್ಧರಿಸುವದಕ್ಕಿಂತ ನೀವೇ ನಿರ್ಧರಿಸಿಕೊಳ್ಳಿ.ದಿನಚರಿ ಬರೆಯುವುದನ್ನು ರೂಢಿಸಿಕೊಂಡರೆ ನಿಮ್ಮ ಆಸಕ್ತಿ ಒಲವು ಅಭಿರುಚಿಗಳು ನಿಮಗೇ ಗೊತ್ತಾಗುತ್ತವೆ. ಆಸಕ್ತಿಯಿದ್ದಲ್ಲಿ ಮನಸ್ಸನ್ನು ಹಿಡಿದಿಡುವುದು ಅವಶ್ಯವಿಲ್ಲ.ಮನಸ್ಸು ತಾನೇ ಆಸಕ್ತಿಯಿಂದ ತೊಡಗಿಕೊಂಡು ಬಿಡುತ್ತದೆ. ಇದರಿಂದ ಏಕಾಗ್ರತೆ ಸುಲಭ ಸಾಧ್ಯವಾಗುವುದು. ಮಾಡುವ ಕೆಲಸವನ್ನು ವಿಭಿನ್ನ ರೀತಿಯಲ್ಲಿ ಮಾಡಬಹುದೇ? ಎಂಬ ಸೃಜನಶೀಲತೆನ್ನು ಅಳವಡಿಸಿಕೊಳ್ಳಲು ದಿನಚರಿ ಉಪಯುಕ್ತ.ಟನಲ್ ವಿಷನ್ ಬಳಸಿಎರಡೂ ಅಂಗೈಗಳಿAದ ಕಣ್ಣುಗಳನ್ನು ಮುಚ್ಚಿಕೊಳ್ಳಿ. ನಂತರ ಅಂಗೈಗಳನ್ನು ಕಣ್ಣುಗಳ ಮೇಲಿಂದ ತೆಗೆಯುತ್ತ ಮುಚ್ಚುತ್ತ ಬ್ಲಿಂರ‍್ಸ್ (ಮಿಣುಕು) ತರ ಉಪಯೋಗಿಸಿ.ನಂತರ ನಿಮ್ಮ ದೃಷ್ಟಿಯನ್ನು ನಿಮ್ಮ ಮುಂದಿರುವ ಗುರಿಯತ್ತ ಹೊರಳಿಸಿ. ಕ್ರಮೇಣವಾಗಿ ಮೆದುಳು ಪೂರ್ತಿ ಏಕಾಗ್ರತೆಯನ್ನು ಪಡೆಯುತ್ತದೆ. ನಿಮ್ಮ ಗುರಿಯತ್ತ ದೃಷ್ಟಿ ಕೇಂದ್ರೀಕರಿಸುವ ಈ ಟನಲ್ ವಿಷನ್ ಪ್ರಕ್ರಿಯೆಯನ್ನು ಬಳಸಿ. ತಾಜಾ ಹಣ್ಣು ಸಮತೋಲಿತ ಆಹಾರ ಸೇವಿಸಿಆದರ್ಶ ಕಣ್ಮುಂದಿರಲಿಬರೀ ಅಧ್ಯಯನ ಮತ್ತು ಕೆಲಸ ಎಂದು ಸಮಯ ಕಳೆದರೆ ನೆಚ್ಚಿನ ಆಟ ಆಡುವುದು ಯಾವಾಗ? ಎಂದು ಯೋಚಿಸದಿರಿ. ಆಡುವಾಗ ಮನಸ್ಸು ಆಟದಲ್ಲಿರಲಿ ಅಧ್ಯಯನದಲ್ಲಿರುವಾಗ ಪುಸ್ತಕದಲ್ಲಿರಲಿ.ಆಡುವಾಗ ಅಭ್ಯಾಸದ ಕುರಿತು ಚಿಂತಿಸಿ ಕಿರಕಿರಿಗೊಳಗಾಗದಿರಿ. ಒಂದೇ ಮಾತಿನಲ್ಲಿ ಸ್ಪಷ್ಟಗೊಳಿಸಬೇಕೆಂದರೆ ಟಿವಿ ನೊಡಿ ಕಪಿ ಛೇಷ್ಟೆ ಮಾಡಿ. ಕಂಪ್ಯೂಟರ್ ಗೇಮ್ ಆಡಿ ಇಷ್ಟವಾದ ಸಂಗೀತ ಆಲಿಸಿ ಕುಣಿಯಿರಿ. ಇವು ನಿಮ್ಮನ್ನು ಪುನಃಶ್ಚೇತನಗೊಳಿಸುತ್ತವೆ. ಆದರೆ ಏನೋ ಮಾಡುವಾಗ ಏನೋ ಯೋಚಿಸುತ್ತ ನಿತ್ರಾಣಗೊಳ್ಳದಿರಿ.. ನೀವು ಎಲ್ಲಿದ್ದಿರೋ ಅಲ್ಲಿಯೇ ನಿಮ್ಮ ಮನಸ್ಸು ಇರಲಿ.ಮಾಡುವ ಕೆಲಸ ಬಿಟ್ಟು ಮನಸ್ಸು ಬೇರೆಲ್ಲೂ ಕದಲದಿರಲಿ. ಏಕಾಗ್ರತೆಯಿಂದಲೇ ಇಡಿ ಜಗತ್ತು ಫಲವತ್ತತೆಯನ್ನು ಪಡೆದಿದೆ ಎನ್ನುವುದು ನೆನಪಿರಲಿ. ಏಕಾಗ್ರತೆಗೆ ಅತ್ಯುತ್ತಮ ಉದಾಹರಣೆಯೆಂದರೆ ಸ್ವಾಮಿ ವಿವೇಕಾನಂದರು. ದೊಡ್ಡ ದೊಡ್ಡ ಗ್ರಂಥಗಳಲ್ಲಿ ಇಷ್ಟನೇ ಪುಟದಲ್ಲಿ ಹೀಗೇ ಹೇಳಲಾಗಿದೆ ಎಂದು ಹೇಳುವಷ್ಟು ಏಕಾಗ್ರಚಿತ್ತರಾಗಿ ಅಧ್ಯಯನ ನಡೆಸುತ್ತಿದ್ದರು. ಅಂಥ ಆದರ್ಶ ಸಾಧಕರು ಕಣ್ಮುಂದಿರಲಿ.ಪ್ರಯತ್ನಿಸಿ -ಸಾಧಿಸಿಕೆಲಸದ ಒತ್ತಡದಲ್ಲಿ ಕೆಲಸಗಳ ತರಾತುರಿಯಲ್ಲಿ ನಾನೇನು ಮಾಡುತ್ತಿದ್ದೇನೆ ಎಂಬುದರ ಪರಿವೆ ಇರಬೇಕಾದುದು ಅನಿವಾರ್ಯ. ಗುರಿಯೆಡೆಗೆ ಗುರಿಯಿಟ್ಟು ಅತ್ಯುನ್ನತ ಸಾಮರ್ಥ್ಯಕ್ಕೆ ಏರಲು ಏಕಾಗ್ರತೆ ಬೇಕೇ ಬೇಕು. ಅಸಾಧಾರಣವಾದುದನ್ನು ಸಾಧಿಸಲು ಸಾಧಾರಣ ಗುಣಮಟ್ಟದ ಏಕಾಗ್ರತೆ ಸಾಕಾಗುವುದಿಲ್ಲ. ಹೆಚ್ಚಿನ ಸಂದರ್ಭಗಳಲ್ಲಿ ಏಕಾಗ್ರತೆ ಸಾಧಿಸಿದಷ್ಟು ದೊರೆಯುತ್ತದೆ.ನಿಮ್ಮ ಬದುಕನ್ನು ವಿಶೇಷ ಮತ್ತು ಮರೆಯಲಾಗದ್ದನ್ನಾಗಿ ಮಾಡಲು ಏಕಾಗ್ರತೆಯ ಹೆಜ್ಜೆಯು ಕಾಲಾಂತರದಲ್ಲಿ ದೊಡ್ಡ ಪರಿಣಾಮ ಬೀರಬಲ್ಲದು. ಏಕಾಗ್ರತೆ ಇಲ್ಲ ಎಂಬ ಬಲಹೀನತೆಯನ್ನು ಅತಿಕ್ರಮಿಸಲು ಪ್ರಯತ್ನಿಸಿ. ಬರೀ ಗುರಿ ಇಟ್ಟರೆ ಸಾಲದು ಹೊಡೆಯಲೂ ಬೇಕು. ಏಕಾಗ್ರತೆಯ ಬೆನ್ನೇರಿ ಗೆಲುವಿನ ನಗೆ ಬೀರಿ ಏಕಾಗ್ರತೆಯನ್ನು ಸಾಧಿಸಿದರೆ ಗೆಲುವು ಕಟ್ಟಿಟ್ಟ ಬುತ್ತಿ. ಸಾಧನೆಯ ಮೈಲಿಗಲ್ಲು ಸ್ಥಾಪಿಸಲು ಸಾಧ್ಯವಾಗುವುದು. **************************** ಲೇಖಕಿ ಜಯಶ್ರೀ ಜೆ ಅಬ್ಬಿಗೇರಿ ಸರಕಾರಿ ಪದವಿ ಪೂರ‍್ವ ಕಾಲೇಜಿನಲ್ಲಿ ಆಂಗ್ಲ ಭಾಷಾ ಉಪನ್ಯಾಸಕಿ . ಇವರ ಹನ್ನೆರಡು ಪುಸ್ತಕಗಳು ಪ್ರಕಟಗೊಂಡಿವೆ. ಓದು ಮತ್ತು ಬರಹ ಹಾಡುಗಾರಿಕೆ ಮಾತುಗಾರಿಕೆ ಇವರ ಹವ್ಯಾಸಗಳು

Read Post »

ಕಾವ್ಯಯಾನ

ಹೇ ರಾಮ್

ಕವಿತೆ ಹೇ ರಾಮ್ ನೂತನ ದೋಶೆಟ್ಟಿ ಸುತ್ತ ಕ್ಲಿಕ್ಕಿಸುವ ಕ್ಯಾಮರಾ ಕಣ್ಣುಗಳುಚಿತ್ರಪಟದಲ್ಲಿ ಸೆರೆಯಾದದ್ದೇನೋ ಹೌದು ಇದು ಯಾರ ಸಮಾಧಿ?ಪ್ರಶ್ನೆಗೆ ಅಪ್ಪನ ಮೆದು ಉತ್ತರಪೋಸು ಕೊಡುವವರ ಪಕ್ಕದಲ್ಲಿಹಿಡಿಯಾದ ನಾನು ಘೋಡ್ಸೆಯನು ಬಣ್ಣಿಸುವವರ ಮಾತುಎದೆ ಹಿಂಡಲಿಲ್ಲಇತಿಹಾಸ ಹೇಳಿತ್ತು ನಿನ್ನೆಗೆ ಮರುಗಬೇಡ ಗುಂಡಿಗೆ ಎದೆಯೊಡ್ಡಿದವಗೆಕಾವಲು ಬಂದೂಕುಗಳುವಿಪರ್ಯಾಸಕ್ಕೂ ಮಿತಿ ಇರಬೇಕು ತತ್ವಗಳೋ ಹೊದಿಕೆ ಹೊದ್ದ ಪುಸ್ತಕಗಳುಬಾಕ್ಸ್ ಆಫೀಸಿನಲ್ಲಿ ಗಾಂಧೀಗಿರಿಯ ಲೂಟಿಖಾದಿಯ ಫ್ಯಾಷನ್ ಮೇಳಸ್ವದೇಶಿ ಬೇಲಿಗೆ ವಿದೇಶಿ ಗೂಟನಾನೊಬ್ಬನೇ ‘ ನಗ್ನ ಫಕೀರ’ **********************************************************

ಹೇ ರಾಮ್ Read Post »

ಅಂಕಣ ಸಂಗಾತಿ, ಮುಖಾಮುಖಿ

ಮನುಷ್ಯತ್ವ, ನಂಬಿಕೆಗಳ ಜಾಗವನ್ನು ಇಂದು ಹಣ ಆಳುತ್ತಿದೆ’ ಎಂ.ಟಿ.ನಾಯ್ಕ ಶಿಕ್ಷಕ, ಕವಿ  ಎಂ.ಟಿ.ನಾಯ್ಕ ಕುಮಟಾ ತಾಲ್ಲೂಕಿನ ಹೆಗಡೆ. ಹೈಸ್ಕೂಲ್ ಹಂತದಿಂದಲೇ ಬರವಣಿಗೆ ಪ್ರಾರಂಭಿಸಿದವರು. ತಾಲ್ಲೂಕು, ಜಿಲ್ಲಾ ಸಾಹಿತ್ಯ ಸಮ್ಮೇಳನಗಳಲ್ಲಿ ಕಾವ್ಯ ವಾಚನ, ಆಕಾಶವಾಣಿ ಧಾರವಾಡ ಮತ್ತು ಕಾರವಾರ ಕೇಂದ್ರಗಳಲ್ಲಿ ಸುಮಾರು ಐದು ಬಾರಿ ಕಾವ್ಯವಾಚನ ಮಾಡಿದ್ದಾರೆ. ಕ್ರೈಸ್ಟ್ ಕಾಲೇಜು ಬೆಂಗಳೂರು , ಜೆ ಎಸ್. ಎಸ್ ಕಾಲೇಜು ಧಾರವಾಡ ಗಳಲ್ಲಿ ನಡೆದ  ಬೇಂದ್ರೆ ಸ್ಮೃತಿ ಕಾವ್ಯ ಸ್ಪರ್ಧೆಗಳಲ್ಲಿ ಬಹುಮಾನ ಬಂದಿವೆ. ಬೆಂಗಳೂರಿನ  ಸಾಂಸ್ಕೃತಿಕ ಪತ್ರಿಕೆ ` ಸಂಚಯ ‘ ಪತ್ರಿಕೆಯ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಬಹುಮಾನ ಸಂದಿವೆ. ಸಂಯುಕ್ತ ಕರ್ನಾಟಕ ವಾರ್ಷಿಕ ಕಥಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ದೊರೆತಿದೆ. ಪತ್ರಿಕೆಗಳಲ್ಲಿ ಕವನಗಳು, ಅಂಕಣ ಬರಹಗಳು ಪ್ರಕಟಗೊಂಡಿವೆ . ಕೆಲವು ಕಥಾಸಂಕಲನ ಹಾಗೂ ಕವನ ಸಂಕಲನಗಳ ಕುರಿತು ಬರೆದ ವಿಮರ್ಶೆಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಕಾಲೇಜು ವಿದ್ಯಾರ್ಥಿಯಾಗಿದ್ದ ಸಂದರ್ಭದಲ್ಲಿ ಮತ್ತು ಎಂ . ಎ. ಮುಗಿಸಿ ಬಂದನಂತರ ಬೇರೆ ಬೇರ ಪತ್ರಿಕೆಗಳಲ್ಲಿ ವರದಿಗಾರನಾಗಿ ಕೆಲಕಾಲ ಕೆಲಸ ಮಾಡಿದ್ದಾರೆ. ಹಾಲಿ ಶಿಕ್ಷಕನಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾವಿಕೊಡ್ಲ  ನಂ  ೨ ಯಲ್ಲಿ  ಸೇವೆ ಸಲ್ಲಿಸುತ್ತಿದ್ದಾರೆ.  ಸದ್ಯ  ` ನೇಪಥ್ಯ ‘ ( ಕವನ ಸಂಕಲನ) ‘ ನನ್ನೊಳಗೆ ನಾನು ‘ ( ಕಥಾಸಂಕಲನ ) ‘ ಸಿಂಧುವಿನಿಂದ ಬಿಂದು ‘ ( ವಿಮರ್ಶಾ ಸಂಕಲ) ಪ್ರಕಟಣೆಯ ಹಾದಿಯಲ್ಲಿದೆ . ………………. ಕಥೆ , ಕವಿತೆಗಳನ್ನು ಯಾಕೆ ಬರೆಯುತ್ತೀರಿ ? ನಾನು ಕವಿ ಅಥವಾ ಕತೆಗಾರನಾಗಬೆಕೆಂಬ ತೆವಲಿಗೆ ಎಂದೂ ಒಳಗಾಗಿಲ್ಲ. ಬೇರೆ ಬೇರೆ ಹಿರಯ ಕವಿ ಕಥೆಗಾರರನ್ನು ಓದಿದ ಹಿನ್ನೆಲೆಯಲ್ಲಿ ಸುತ್ತಲಿನ ಸಮುದಾಯದ ನೋವು – ನನ್ನ ನೋವು ,ನಲಿವುಗಳೊಂದಿಗೆ ತಾದಾತ್ಮ್ಯ ಹೊಂದಿದಾಗ ನನ್ನೊಳಗಿನ ಸಹಜವಾದ ಕವಿತ್ವದ ಪ್ರಜ್ಞೆ ಜಾಗ್ರತ ಗೊಂಡು ಅದು ಭಾಷೆಯ ನೆಲೆಯಲ್ಲಿ ಅಕ್ಷರ ರೂಪ ಪಡೆದಾಗ ಅದು ಕವನವಾಗಬಹುದು , ಅಥವಾ ಅದು ಸಂಭಾಷಣೆ, ವಿವರಣೆ ,ವಿಶ್ಲೇಷಣೆ , ನೀರೂಪಣೆಗಳನ್ನೊಳಗೊಂಡ ಪಾತ್ರಗಳ ರೂಪವನ್ನು ಪಡೆದಾಗ ಅದು ಕಥೆ ಕೂಡಾ ಆಗಬಹುದು. ಆದರೆ ಕಥೆ ಅಥವಾ ಕವಿತೆಗಳಿಗೆ ಸಂಬಂಧಿಸಿದ ಸಂಗತಿಗಳು ಒಮ್ಮೆ ಹುಟ್ಟಿ , ಹಲವಾರು ದಿನಗಳವರೆಗೆ ಮತ್ತೆ ಮತ್ತೆ ಕಾಡಿದಾಗ ಅದು ಆಯಾ ರೂಪದಲ್ಲಿ, ಅನಾವರಣಗೊಂಡು ಸಫಲ ಪ್ರಸವದ ಆನಂದಾನುಭೂತಿಯನ್ನು ಆ ಕ್ಷಣಕ್ಕೆ ನೀಡುತ್ತದೆಯಷ್ಟೆ . ಕಥೆ ಅಥವಾ ಕವಿತೆ ಹುಟ್ಟುವ ಕ್ಷಣ ಯಾವುದು ? ನನ್ನ ದೃಷ್ಟಿಯಲ್ಲಿ ಅದಕ್ಕೆ ಇಂತಹುದೇ ಕ್ಷಣ ಅಂತೇನೂ ಇಲ್ಲ. ನಾನು ಕ.ವಿ.ವಿ ಧಾರವಾಡದಲ್ಲಿ ಕನ್ನಡ ಸಾಹಿತ್ಯದ ವಿದ್ಯಾರ್ಥಿಯಾಗಿ ಎಂ. ಎ. ಮಾಡುತ್ತಿದ್ದ ಸಂದರ್ಭದಲ್ಲಿ ನಮ್ಮ ಗುರುಗಳಾದ  ದಿ. ಡಾ. ಎಂ. ಎಂ.ಕಲ್ಬುರ್ಗಿ ಸರ್ ರವರು ಒಮ್ಮೆ ತರಗತಿಯಲ್ಲಿ ಪಾಠ ಮಾಡುತ್ತಿದ್ದಾಗ ಮಾತನಾಡುತ್ತಾ ‘ ಜೀವನಾನುಭವವೇ ಸಾಹಿತ್ಯದ ಮೂಲ ದ್ರವ್ಯ ‘ ಎಂದಿದ್ದು ಈಗಲೂ ನೆನಪಿದೆ. ಅಂತಹ ಅನುಭವಗಳು ಕಥೆ ಅಥವಾ ಕವನವಾಗಬಲ್ಲ ಸಾಹಿತ್ಯಕ ಅನುಭೂತಿಯನ್ನು ಹೊಂದಿ ಗಾಢವಾಗಿ ಕಾಡಿದಾಗ ಅದು ಕತೆ ಅಥವಾ ಕವಿತೆಯಾಗಿ ರೂಪು ತಳೆಯುತ್ತದೆ ಅಷ್ಟೇ.  ನಿಮ್ಮ ಕಥೆಗಳ ವಸ್ತು , ವ್ಯಾಪ್ತಿ ಹೆಚ್ಚಾಗಿ ? ಪದೇ ಪದೇ ಕಾಡುವ ವಿಷಯ ಯಾವುದು ?.  ಬದುಕು ..! ಎಲ್ಲಾ ಲೇಖಕರ ಹಾಗೆಯೇ ನನ್ನ ಕಥೆಗಳ ವಸ್ತು ಮತ್ತು ವ್ಯಾಪ್ತಿ ಬದುಕಿಗೆ ಸಂಬಂಧಿಸಿದ ಸಂಗತಿಗಳೇ ಆಗಿವ. ಈ ಬದುಕಿನಲ್ಲಿ ಪ್ರೀತಿ ಯಿದೆ,ಪ್ರೇಮವಿದೆ,ನಂಬಿಕೆ – ವಿಶ್ವಾಸಗಳಿವೆ, ಅಲ್ಲಿ ವಂಚನೆ , ಮೋಸ , ದ್ರೋಹ , ಹಿಂಸೆ , ದೌರ್ಜನ್ಯಗಳಿವೆ .ಹಾಗೆನೆ ಪ್ರಾಮಾಣಿಕತೆ ಕೂಡ ಇವೆ . ಇವೆಲ್ಲವೂ ಸಂದರ್ಭಾನುಸಾರ ಕಥೆಯ ವಸ್ತುಗಳಾಗುತ್ತವೆ .   ಇತ್ತೀಚಿನ ದಿನಗಳಲ್ಲಿ ಒಂದು ಹೊಸ ಟ್ರೆಂಡ್ ಸುರುವಾಗಿದೆ. ಅದೆಂದರೆ ಹೇಗಾದರೂ ಸರಿಯೆ ಹಣಮಾಡಬೇಕು . ಅದರಿಂದ ನಮ್ಮ ಸಮಾಜ ಅದರಲ್ಲೂ ನಮ್ಮ ಯುವ ಜನಾಂಗ ಹಣದ ಹಿಂದೆ ಬಿದ್ದಿದೆ . ಮನುಷ್ಯತ್ವ, ಮಾನವೀಯತೆ , ಪ್ರೀತಿ ,ನಂಬಿಕೆಗಳ ಜಾಗವನ್ನು ಇಂದು ಹಣ ಆಳುತ್ತಿದೆಯೆಂದರೆ ತಪ್ಪಾಗದು . ಮಾನವೀಯ ಮೌಲ್ಯಗಳ ಕುರಿತು ಮಾತನಾಡುವವರು ಎಂದರೆ ಒಂಥರಾ ಹುಚ್ಚರಹಾಗೆ ಅನ್ನುವ ಹಂತಕ್ಕೆ ನಮ್ಮ ಸಾಮಾಜಿಕ ಬದುಕು ತಲುಪಿದೆ . ಇದು ನಮ್ಮ  ಒಟ್ಟಾರೆ ವ್ಯವಸ್ಥೆಯ ದುರಂತವೇ ಸರಿ . ತಮ್ಮ ಮಕ್ಕಳ ಬದುಕನ್ನು ಗಟ್ಟಿಗೊಳಿಸಲು ಬದುಕಿನುದ್ದಕ್ಕೂ ಹೆಣಗಾಡುವ ತಂದೆತಾಯಿಗಳು , ಅದರೆ ಅದೇ ಮಕ್ಕಳು ವಯಸ್ಸಿಗೆ ಬಂದಾಗ ತಂದೆತಾಯಿಗಳನ್ನು ತಿರಸ್ಕರಿಸುವುದು ಒಂದುಕಡೆಯಾದರೆ , ವಯಸ್ಸಿಗೆ ಬಂದ ಮಗ ತನ್ನ ತಂದೆತಾಯಿ , ಸಹೋದರ, ಸಹೋದರಿಯರ ಬದುಕಿಗಾಗಿ ತನ್ನ ವಯಕ್ತಿಕ ಬದುಕನ್ನು ಮರೆತು ರಕ್ತವನ್ನು ಬೆವರಿನರೂಪದಲ್ಲಿ ಚೆಲ್ಲಿ ಜವಾಬ್ದಾರಿಯಿಂದ ನಿರ್ವಹಿಸುವ ಸಂದರ್ಭದಲ್ಲೂ ಅಂತವರಿಗೆ ಕುಟುಂಬದ ಎಲ್ಲರಿಂದಲೂ ಆಗುವ ವಂಚನೆ ನೀಡುವ ನೋವುಗಳು ಗಾಢವಾಗಿ ಕಾಡಿದಾಗ ಅವುಗಳು ಕಥೆಗಳಿಗೆ ಗಟ್ಟಿ ವಸ್ತುಗಳಾಗುತ್ತವೆ .   ಎಲ್ಲಕ್ಕಿಂತಲೂ ಹೆಚ್ಚಾಗಿ ಪ್ರಾಮಾಣಿಕತೆ, ಪ್ರೀತಿ , ಪ್ರೇಮ, ವಿಶ್ವಾಸ, ನಂಬಿಕೆಗಳಿಗೆ ವಿರುದ್ಧವಾಗಿ ಎಸಗುವ ದ್ರೋಹ, ವಂಚನೆ , ಮೋಸ ಇದೆಯಲ್ಲಾ ..ಇವುಗಳು ಯಾವುದೇ ರೀತಿಯ ಹಿಂಸೆ, ದೌರ್ಜನ್ಯಗಳಿಗಿಂತಲೂ ಭೀಕರ ಎನಿಸುತ್ತವೆ . ಈ ಮುಂತಾದ ಸಂಗತಿಗಳೆಲ್ಲವೂ ನನ್ನ ಕಥೆಗಳಿಗೆ ವಸ್ತುವಾಗುತ್ತವೆ . ಹಾಗೇನೇ ಅತಿಯಾದ ಮದ್ಯಪಾನ ಮುಂತಾದ ದುಶ್ಚಟಗಳು , ಅವುಗಳಿಂದ ಬದುಕಿಗಾಗುವ ಹಾನಿ ಇವೆಲ್ಲವೂ ಕೆಲವು ಸಂದರ್ಭಗಳಲ್ಲಿ ವಸ್ತುವಾಗಿವೆ . ಕಥೆ , ಕವಿತೆಗಳಲ್ಲಿ ಬಾಲ್ಯ , ಹರೆಯ ಇಣುಕಿದೆಯೇ  ? ಯಾಕಿಲ್ಲ ..? ಪ್ರತಿಯೊಬ್ಬ ಬರಹಗಾರನ ಬರವಣಿಗೆಯಲ್ಲೂ ಕೂಡ ಅವನ ಬಾಲ್ಯ ಮತ್ತು ಹರಯದ ಅನುಭವಗಳು ಇಣುಕಿನೋಡುತ್ತವೆ . ನನ್ನ ಬರವಣಿಗೆಯೂ ಕೂಡ ಅದಕ್ಕೆ ಹೊರತಾಗಿಲ್ಲ . ನಾನು ಬರೆದ ಪ್ರೇಮ ಕವನವೊಂದನ್ನು ಓದಿದ ಬಿಜಾಪುರ ಜಿಲ್ಲೆಯ ನನ್ನ ಎಂ. ಎ. ಸಹಪಾಠಿಯೊಬ್ಬರು ಇದು ನನ್ನ ಬದುಕಿನ ಸಂದರ್ಭಕ್ಕೆ ಸಂಬಂಧಿಸಿದಂತೆ ಇದೆ , ಎಂದಾಗ ನಾನು ಆಶ್ಚರ್ಯಗೊಂಡಿದ್ದೆ. ನನ್ನ ಬಾಲ್ಲದ ದಿನಗಂಳಿದ ಹಿಡಿದು ನಾನು ಶಿಕ್ಷಣ ಪಡೆದು ವ್ರತ್ತಿ ಜೀವನಕ್ಕೆ ಬರುವಲ್ಲಿಯವರೆಗೆ ನನ್ನನ್ನು ,ನಮ್ಮ ಕುಟುಂಬವನ್ನು ಕಾಡಿದ ಅತ್ಯಂತ ನಿಕ್ರಷ್ಟ ಎನ್ನಬಹುದಾದ ಬಡತನ , ನಾನು ಶಿಕ್ಷಣ ಪಡೆಯುವುದಕ್ಕಾಗಿ ನಡೆಸಿದ ಹೋರಾಟ , ಆ ಸಂದರ್ಭಗಳಲ್ಲಿ ಮಹಾತ್ಮರೊಬ್ಬರು ನನ್ನನ್ನು ಕೈಹಿಡಿದು ನಡೆಸಿದ್ದು ಇನ್ನೂ ಮುಂತಾದ ಸಂಗತಿಗಳು, ಅಭವಗಳು , ನನ್ನ ಬರವಣಿಗೆಯಲ್ಲಿ ಇಣುಕಿಹಾಕಲೆಬೇಕಲ್ಲ.  ಧರ್ಮ , ದೇವರು ವಿಷಯದಲ್ಲಿ ನಿಮ್ಮ ನಿಲುವೇನು   ? ಇದು ತೀರಾ ಕ್ಲಿಷ್ಟಕರ ಪ್ರಶ್ನೆ ಎನ್ನಬೇಕಾಗುತ್ತದೆ . ಯಾಕೆಂದರೆ ಧರ್ಮದ ಕುರಿತು ಮಾತನಾಡುವಷ್ಟು ಧರ್ಮ ಸೂಕ್ಷ್ಮವನ್ನರಿತ ಧರ್ಮಜ್ಞ ನಾನಲ್ಲ. ಹಾಗೆ ನೋಡಿದರೆ ಧರ್ಮಕ್ಕಿಂತಲೂ ಮೊದಲು ಹುಟ್ಟಿದವ ಮನುಷ್ಯ . ಅವನ ನಂತರ ಅವನಿಂದಲೇ ಅಂದರೆ ಮನುಷ್ಯನಿಂದ ಹುಟ್ಟಿದ್ದು ಧರ್ಮ. ಕಾಡಿನಿಂದ ನಾಡಿನೆಡೆಗೆ , ಅನಾಗರಿಕತೆಯಿಂದ ನಾಗರಿಕತೆಯೆಡೆಗೆ ಮಾನವ ಹೆಜ್ಜೆಯಿಟ್ಟು ಅಲ್ಲಿ ಸಾಕಷ್ಟು ಪ್ರವರ್ಧಮಾನಕ್ಕೆ ಬಂದಮೇಲೆ ಹುಟ್ಟಿಕೊಂಡದ್ದು ಧರ್ಮ. ಮನುಷ್ಯ ತನ್ನ ವಯಕ್ತಿಕ ಹಾಗೂ ಸಾಮುದಾಯಿಕ ಜೀವನವನ್ನು ಹೆಚ್ಚು ಸುಂದರಗೊಳಿಸಿಕೊಳ್ಳುವುದಕ್ಕಾಗಿ , ಹೆಚ್ಚು ಮೌಲ್ಯಯುತಗೊಳಿಸಿಕೊಳ್ಳುವುದಕ್ಕಾಗಿ ಒಂದರ್ಥದಲ್ಲಿ ಹೆಚ್ಚು ಅರ್ಥಪೂರ್ಣ ಗೊಳಿಸಿಕೊಳ್ಳುವುದಕ್ಕಾಗಿ ಆ ಕಾಲದಲ್ಲಿ ಅವನು ಕಂಡುಕೊಂಡ ಸುಲಭ ಸಾಧನ ಧರ್ಮ.    ಆದರೆ ಇಂದು ಏನಾಗುತ್ತಿದೆ  ? ಧರ್ಮ ಮನುಷ್ಯನ ಜೀವನದಮೇಲೆ ಸವಾರಿಮಾಡುವಷ್ಟು ಪ್ರಭಲವಾಗಿ ಬೆಳೆದುನಿಂತಿದೆ . ಇದು ಕೇವಲ ನಮ್ಮ ದೇಶದ ವಿದ್ಯಮಾನವಷ್ಟೆ ಅಲ್ಲ. ಇದು ಜಾಗತಿಕ ವಿದ್ಯಮಾನವಾಗಿದೆ . ಇಂದು ಧರ್ಮದ ಕಾರಣದಿಂದಾಗಿ ನಮ್ಮ ವಯಕ್ತಿಕ ಹಾಗೂ ಸಾಮಾಜಿಕ ಬದುಕು ವಿಕ್ರತಗೊಳ್ಳುತ್ತಿವೆ …ಸಂದಿಗ್ಧತೆಗೆ ಒಳಗಾಗಿದೆ . ಇಂತಹ ಬೆಳವಣಿಗೆ ನಮ್ಮ ಸಾಮಾಜಿಕ ಮತ್ತು ರಾಷ್ಟ್ರೀಯ ಜೀವನಕ್ಕೆ ತಕ್ಕುದಾದ ಬೆಳವಣಿಗೆಯಂತೂ ಅಲ್ಲ. ಸ್ವಾಮಿ ವಿವೇಕಾನಂದರು ಧರ್ಮ ಮತ್ತು ದೇವರ ಕುರಿತು ಹೇಳುವಾಗ ..’ ವಿಧವೆಯರ ಕಣ್ಣೀರು ಒರೆಸದ , ಹಸಿದವನಿಗೆ ತುತ್ತು ಅನ್ನವ ನೀಡದ ದೇವರು ಮತ್ತು ಧರ್ಮದಲ್ಲಿ ನನಗೆ ನಂಬಿಕೆಯಿಲ್ಲ ಎಂದಿದ್ದಾರೆ. ಯಾವುದು ನಮ್ಮಲ್ಲಿಯ ಮಾನವೀಯ ಪ್ರಜ್ಞೆ ಯನ್ನು ಜಾಗ್ರತಗೊಳಿಸಲು ಶಕ್ತವಾಗುತ್ತದೆಯೋ ಅದು ಧರ್ಮ. ಪರಸ್ಪರ ಪ್ರೀತಿ , ವಿಶ್ವಾಸ , ನಂಬಿಕೆ , ಪ್ರಾಮಾಣಿಕತೆ ಇವೇ ಅದರ ತಳಹದಿ . ಇವುಗಳಿಗೆ ಧಕ್ಕೆತರುವಂತ ಸಂಗತಿಗಳೆ ಅಧರ್ಮ. ನಾನು ಬದುಕುತ್ತಾ ನನ್ನೊಂದಿಗೆ ಇನ್ನುಳಿದ ಎಲ್ಲರನ್ನೂ ಬದುಕಲು ಬಿಡುವುದೇ ಧರ್ಮ .ಇದಕ್ಕಿಂತ ಹೆಚ್ಚಿಗೆ ಇನ್ನೇನು ಹೇಳಲಾರೆ.   ಇನ್ನು  ‘ ದೇವರು ‘ ಕುರಿತು ಹೇಳುವುದಾದರೆ ‘ ದೇವರು ‘ ಇದ್ದಾನೆ ಎಂಬ ನಂಬಿಕೆ ಹೊಂದಿದವರೆಲ್ಲಾ ಆಸ್ತಿಕ ಗುಂಪಿಗೆ ಸೇರಿದರೆ ‘ ದೇವರ ‘ ಅಸ್ತಿತ್ವದ ಕುರಿತು ಸಂಶಯಪಡುವವರೆಲ್ಲಾ ನಾಸ್ತಿಕ ಗುಂಪಿಗೆ ಸೇರಿಬಿಡುತ್ತಾರೆ . ಇದು ಪ್ರಪಂಚ ಇರುವತನಕ ಮತ್ತು ಈ ಪ್ರಪಂಚದಲ್ಲಿ ಕಟ್ಟಕಡೆಯ ಮನುಷ್ಯ ಇರುವಲ್ಲಿಯ ತನಕ ಮುಂದುವರೆಯುವ ಚರ್ಚೆಯಾಗಿದೆ . ‘ ದೇವರು ‘ ಇದ್ದಾನೆಯೇ ಎನ್ನುವುದು ಅವರವರ ಸ್ವಯಂ ಅನುಭವವೇದ್ಯವಾದ ಸಂಗತಿಯಾಗಿದೆ . ಇನ್ನು ನನ್ನ ದ್ರಷ್ಟಿಯಲ್ಲಿ ನಾನು ಕಷ್ಟದಲ್ಲಿದ್ದಾಗ ಯಾರು ನನ್ನನ್ನು ಕೈಹಿಡಿದು ನಡೆಸಲು ಪ್ರಯತ್ನಿಸುತ್ತಾರೋ , ನಾನು ಸಾವು ಬದುಕುಗಳನಡುವೆ ಹೋರಾಡುತ್ತಿರುವಾಗ ಕಾಳಜಿಯಿಂದ ನನ್ನನ್ನು ಉಳಿಸಲು ಪ್ರಾಮಾಣಿಕವಾಗಿ ಹೆಣಗಾಡುತ್ತಾರೆಯೋ ಅವರೇ ನನ್ನ ಪಾಲಿಗೆ ದೇವರು . ಯಾಕೆಂದರೆ ಅವರು ಮಾತ್ರ ನಾನು ಕಾಣಲು ಸಾಧ್ಯವಾಗುವ ಸತ್ಯದ ದೇವರಾಗಿರುತ್ತಾರೆ . ಇದಕ್ಕೆ ಹೊರತಾದ ಅನ್ಯ ವಿಚಾರ ‘ ದೇವರ ‘ ಕುರಿತಂತೆ ನನ್ನಲ್ಲಿಲ್ಲ.  ಪ್ರಸ್ತುತ ರಾಜಕೀಯ ಸನ್ನಿವೇಶದ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು  ? ನಿಮ್ಮ ಈ ಪ್ರಶ್ನೆ ನನ್ನ ವ್ಯಾಪ್ತಿಗೆ ಸಂಬಂಧಿಸಿದ್ದಲ್ಲ. ಆದರೂ ಈ ದೇಶದ ಪ್ರಜೆಯಾಗಿ , ಪ್ರಜಾಪ್ರಭುತ್ವದ ನಿಯಮಾವಳಿಗಳಿಗೆ ಒಳಪಟ್ಟ ಒಬ್ಬ ಜವಾಬ್ದಾರಿಯುತ ಮತದಾರನಾಗಿ ನಿಮ್ಮ ಪ್ರಶ್ನೆಗೆ ಕೆಲವು ಮಿತಿಗೆ ಒಳಪಟ್ಟು ಪ್ರತಿಕ್ರಿಯಿಸಬಹುದು ಎಂದುಕೊಳ್ಳುತ್ತೇನೆ .   ಇತ್ತೀಚಿನ ದಿನಗಳಲ್ಲಿ ಬದುಕಿನ ಎಲ್ಲಾ ಸ್ತರಗಳಲ್ಲೂ ಮೌಲ್ಯಗಳು ಕುಸಿಯುತ್ತಿವೆ ಎಂದು ಹೇಳಲಾಗುತ್ತಿವೆ . ಅದು ರಾಜಕೀಯ ಕ್ಷೇತ್ರಕ್ಕೂ ಹೊರತಾಗಿಲ್ಲ. ಮಹಾನ್ ರಾಷ್ಟ್ರೀಯ ಚಿಂತಕರನ್ನು ,ಯಾವುದೇ ವಿಧದ ಧಾರ್ಮಿಕ, ಸಾಮಾಜಿಕ ತಾರತಮ್ಯವಿಲ್ಲದ ಸರ್ವಜನಾಂಗದ ಹಿತಚಿಂತಕರುಗಳನ್ನು ರಾಷ್ಟ್ರದ ರಾಜಕೀಯ ನೇತಾರರುಗಳನ್ನಾಗಿ ಪಡೆದ ದೇಶ ಇದು . ಆದರೆ ಇಂದು ಈ ದೇಶದ ರಾಜಕೀಯ, ಸಾಮಾಜಿಕ ಜೀವನ ಹಾಗಿದೆಯೇ ಎಂದು ನಮ್ಮನ್ನು ನಾವು ಪ್ರಶ್ನಿಸಿಕೊಳ್ಳಲು ಶಕ್ತರಾದರೆ ನಿಮ್ಮ ಪ್ರಶ್ನೆಗೆ ಉತ್ತರ ಸಿಗುತ್ತದೆ .   ಸದ್ಯದ ವಿದ್ಯಮಾನಗಳನ್ನು ಗಮನಿಸಿದರೆ ರಾಜಕೀಯದ ಮೂಲಕ ರಾಷ್ಟ್ರ ಸೇವೆ , ಸಮಾಜ ಸೇವೆ ಎನ್ನುವ ಮಾತು ಕೇವಲ ಸವಕಲು ನಾಣ್ಯಗಳಾಗಿವೆ ಎನಿಸುವುದಿಲ್ಲವೆ  ? ಅವರು ಅಷ್ಟು ಹಾಳುಗೆಡವಿದ್ದಾರೆ , ಅಕ್ಕಾಗಿ ಇವರು ಇಷ್ಟು ಕುಲಗೆಡಿಸುತ್ತಾರೆ …ಅದನ್ನೆಲ್ಲಾ ಪ್ರಶ್ನಿಸಲು ನೀವುಗಳು ಯಾರು  ? ಎಂಬ ಪ್ರಶ್ನೆಗಳು ಹೊರಬೀಳುತ್ತಿರುವುದನ್ನು ನಾವು ಕೇಳುತ್ತಿದ್ದೇವೆ .   ಹಾಗೆ ನೋಡಿದರೆ ನಮಗೆ ತೀರಾ ಪುಕ್ಕಟೆಯಾಗಿ ದೊರೆತ ಮತದಾನದ ಹಕ್ಕೂ ಕೂಡ ಇಂದಿನ ವಿದ್ಯಮಾನಗಳಿಗೆ ಕೆಲಮಟ್ಟಿಗೆ ಕಾರಣವಾಗಬಹುದೇನೊ ? ಯಾಕೆಂದರೆ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಅಲ್ಲಿಯ ಪ್ರಜೆಗಳು ರಾಜಕೀಯ ಹಕ್ಕಿಗಾಗಿ ಹೋರಾಟ ನಡೆಸಿದ ಇತಿಹಾಸವನ್ನು ನಾವು ಓದುತ್ತೇವೆ. ಆದರೆ ನಮ್ಮಲ್ಲಿ ಪ್ರಜಾಪ್ರಭುತ್ವದ ನೆಲೆಯಲ್ಲಿ ರಾಜಕೀಯ ( ಮತದಾನದ ) ಹಕ್ಕು ,

Read Post »

You cannot copy content of this page

Scroll to Top