ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಓ ನಮ್ಮ ಶಿಕ್ಷಕ ನೀ ನಮ್ಮ ರಕ್ಷಕ

ಓ ನಮ್ಮ ಶಿಕ್ಷಕ ನೀ ನಮ್ಮ ರಕ್ಷಕ ವಿಭಾ ಪುರೋಹಿತ್ ಓ ನಮ್ಮ ಶಿಕ್ಷಕನೀ ನಮ್ಮ ರಕ್ಷಕ ಮರೆಯಲೆಂತು ನಿನ್ನ ಸೇವೆಕರೆವ ಜ್ಞಾನ ಹಾಲ ಗೋವೆನಿನಗೆ ನಮ್ಮ ನಮನವುನಿನ್ನ ಅಡಿಗೆ ಸುಮನವು————ಧಾರವಾಡದ ಜಿ. ಎಸ್. ಕುಲಕರ್ಣಿ ಧಾರವಾಡದ ಜಿ.ಎಸ್ . ಕುಲಕರ್ಣಿ ಅವರ ಸಾಲುಗಳು ಇಲ್ಲಿ ನೆನೆಯಬಹುದು ಮನಃಪಟಲಕ್ಕೆ ಬಂದು ಅಚ್ಚೊತ್ತಿದ ಕೆಲವು ಘಟನೆಗಳನ್ನು ಬರೆಯದೇ ಇರಲಾಗುವುದಿಲ್ಲ.ಎಲ್ಲಿಂದಲೋ ಬಂದ ದಿವ್ಯ ಚೇತನ ಬೆನ್ನುತಟ್ಟಿ ಬರೆಯಲಾರಂಭಿಸಿತು.ಮೂವತ್ತು ವ ರ್ಷಗಳ ಹಿಂದೆ ಓಡಾಡಿದ ಜಾಗ,ಆಟವಾಡಿದ ಸ್ಥಳ,ಮಣ್ಣಿ ಗೆ,ಕಲ್ಲಿಗೆ ಅಕ್ಕರೆಯಿಂದ ಮುತ್ತಿಟ್ಟು ಆಡುತ್ತಿದ್ದ ಕುಂಟಾಟ ಒಂದಾದ ಮೇಲೊಂದು ನೆನಪಿನ ಪರದೆಯ ಮೇಲೆ ಮೂಡಿ ಬಂದವು.ನಾವು ಕಲಿತ ಶಾಲೆ,ಶಾಲಾಪ್ರಾಂಗಣ,ಆಟದ ಮೈದಾನಗಳೆಲ್ಲವು ನಮ್ಮನ್ನು ಕೈಬೀಸಿ ಕರೆಯುತ್ತಿದ್ದಂತೆ ಭಾಸ.ಅದೇ ಧ್ವಜಸ್ತಂಭ,ಹಿಂದೆ ರಾಷ್ಟ್ರೀಯ ಹಬ್ಬಗಳಂದು ಎದೆ ಉಬ್ಬಿಸಿ ನಿಂತು ಅತ್ತಿತ್ತ ಅಲ್ಲಾಡದೆ ‘ ಜನಗಣ ಮನ ‘ ಹಾಡಿ ಸೆಲ್ಯುಟ್ ಮಾಡಿದ್ದು .ಗೆಳೆಯ ಗೆಳತಿಯರೊಡನೆ ತುಂಟಾಟವಾಡಿದ ದಿನಗಳು ಕಣ್ಮುಂದೆ ತೇಲಿ ಹೋದವು. ಜ್ಞಾನಕ್ಕೆ ಹ್ಯಾಗೆ ಜಾತಿ ಮತ ಭಾಷೆಗಳ ತಾರತಮ್ಯವಿಲ್ಲ ವೋ,ಅದೇ ರೀತಿ ಬಾಲ್ಯ.ಬಾಲ್ಯ ಜೀವನಾವಸ್ಥೆಯ ಒಂದು ಅದ್ಭುತವಾದ ಘಟ್ಟ.ಎಲ್ಲರೊಡನೆ ಬೆರೆತು ಬಾಳಿದ,ಆಡಿ ದ ಸವಿ ಸವಿ ನೆನಪಿದೆ.ಈರ್ಷೆ,ಮತ್ಸರ ಎಂಬ ಪದಗಳೇ ಗೊತ್ತಿಲ್ಲದ ನಿರ‍್ಮಲ ಮನೋಭಾವ. ಮುಗ್ಧಮನ ಶುದ್ಧ ಮ ನ. ಅಂದಿನ ಪರಿಸರ ಎಷ್ಟೊಂದು ಸಕಾರಾತ್ಮಕ !ಸುತ್ತ ಮುತ್ತಲು ಧಾರ್ಮಿಕವಾಗಿ,ಸಾಂಸ್ಕೃತಿಕವಾಗಿ ಹಾಗೂ ಶೈಕ್ಷಣಿ ಕವಾಗಿ ಬೆಳವಣಿಗೆಯಾಗಲು ಸಂಪೂರ್ಣ ಹೇಳಿ ಮಾಡಿಸಿ ದಂತಹ ವಾತಾವರಣ. ಸರ್ವಸದ್ಗುಣಗಳನ್ನು ಹೊಂದಿದಂಥ ನನ್ನ ಬಾಲ್ಯ ಭೂಮಿ ಕೃಷ್ಣಾಪುರ,ಜಿ|| ಯಾದಗಿರಿ. ಮುಂದೊಂದುದಿನ ಅಲ್ಲಿಗೆ ಭೇಟಿ ಕೊಡುತ್ತೇನೆಂದು ನಾನು ಅಂದುಕೊಂಡಿರಲೇ ಇಲ್ಲ. ಫೆಬ್ರವರಿ ೧೫,೨೦೧೯ ಆ ಪುನರ್ಮಿಲನದ ಸುಸಂಧಿ.ಇಂಥಹ ಸದಾವಕಾಶವನ್ನು ಕಲ್ಪಿಸಿಕೊಟ್ಟ ಹಳೆಯ ವಿದ್ಯಾರ್ಥಿ ಸಂಘದ ರೂವಾರಿಗಳಿಗೆ ಮನದಲ್ಲಿ ಕೃತಜ್ಞತಾ ಭಾವವಿತ್ತು. ಬೆಂಗಳೂರಿನಿಂದ ಆ ಪುಣ್ಯ ಭೂಮಿಗೆ ಕಾಲಿಟ್ಟ ಕೂಡಲೇ ತಿರುಪತಿಗಿರಿವಾಸ ಶ್ರೀವೆಂಕ ಟೇಶನಂತೆ ಮೊದಲು ದರುಶನ ನೀಡಿದ್ದು ನಮ್ಮ ಸಮಾಜ ಪಾಠದ ಗುರುಗಳಾದ ರಾಮರೆಡ್ಡಿಯವರು.ಮನದಲ್ಲಿ ಉ ಲ್ಲಾಸ,ರೋಮಾಂಚನದೊಂದಿಗೆ ಪುಳಕಿತಗೊಂಡು ಅವರ ಪಾದಗಳಿಗೆ ನಮಸ್ಕರಿಸಿದೆ. ಹಳೆಯ ವಿದ್ಯಾರ್ಥಿ ಸಂಘದಿಂದ ಹಮ್ಮಿಕೊಂಡಿದ್ದ ಕಾರ‍್ಯ ಕ್ರಮದ ರೂಪುರೇಷೆಯಂತೆ ಪ್ರಥಮವಾಗಿ ಗುರುವೃಂದ ವನ್ನು ಬಿಜಾಸ್ಪೂರ ಶಾಲೆಯಿಂದ ಕೃಷ್ಣಾಪುರ ಕ್ಯಾಂಪ್ ಶಾಲೆಗೆ ಮೆರವಣಿಗೆಯಲ್ಲಿ ಕರೆತರಲಾಯಿತು.ನೂರಾರು ವಿ ದ್ಯಾರ್ಥಿಗಳು,ಊರಿನಜನರು ಹಾಗೂ ಗುರುಗಳು,ಕಡು ಬಿಸಿಲಿನ ಶಾಖವನ್ನು ಮರೆತು ಗುರುವಂದನೆಯ ಧನ್ಯತೆ ಯ ತಂಪನ್ನು ಸವಿಯುತ್ತ ಹೆಜ್ಜೆಹಾಕಿದರು.ಇದರೊಂದಿಗೆ ಗ್ರಾಮೀಣ ಸೊಗಡಿನ ಡೊಳ್ಳು ಕುಣಿತವು ಸರ್ವರಕಣ್ಮನ ತಣಿಸಿತು. ವಿಶಾಲವಾದ ಶಾಲಾ ಪ್ರಾಂಗಣ ಗುರುವಂದನಾ ಕಾರ‍್ಯಕ್ರ ಮದ ಮೆರವಣಿಗೆಗೆ ಹಾತೊರೆಯುತ್ತಿದ್ದಂತೆ ಕಂಡಿತು. ಪ್ರತಿ ಯೊಬ್ಬರಿಗೂ ಮಂದಹಾಸ ಬೀರಿ ಮಡಿಲಲ್ಲಿ ಕೂರಿಸಿಕೊಂ ಡಿತು ನಮ್ಮ ತರಗತಿಗೆ ಕಲಿಸಿದ ಗುರುಗಳು ಕೇವಲ ನಾಲ್ಕು ಜನ ಮಾತ್ರ ಹಾಜರಿದ್ದರು.ಉಳಿದವರು ನಮ್ಮನ್ನಗಲಿದ್ದಾ ರೆಂದು ತಿಳಿದು ತುಂಬ ನೋವಾಯಿತು.ಇನ್ನೊಮ್ಮೆ ಅವರ ದರ್ಶನ ಸಾಧ್ಯವಾಗಲಿಲ್ಲವೆಂದು ಮನ ಕೊರಗಿತು.ಗುರು ವೃಂದಕ್ಕೆ ಸನ್ಮಾನಿಸಲಾಯಿತು.ನಂತರ ಗುರುಗಳೆಲ್ಲರು ತಾವು ಅನು ಭವಿಸಿದ ಬದುಕಿನ ಸತ್ವಯುತ ನುಡಿಗಳನ್ನಾಡಿ ಸಭೆಯನ್ನು ಮೂಕ ವಿಸ್ಮಿತಗೊಳಿಸಿದರು. ಅಪಾರ ಜೀವನಾನುಭವ ವುಂಡವ ಅವರ ಕಣ್ಣುಗಳು ಒದ್ದೆಯಾದವು. ಹನಿ ಹನಿ ನೆನ ಪಿನ ಬುತ್ತಿಯನ್ನು ಸವಿಸವಿಯಾಗಿ ಹೃದಯ ತುಂಬಿ ಹಂಚಿಕೊಂಡರು. ಈ ವೇದಿಕೆಯಲ್ಲಿ ಮತ್ತೊಂದು ಅಪರೂಪದ ಕ್ಷಣ ನಮಗೆಲ್ಲ ಕಾದಿತ್ತು.ನಮ್ಮ ಹಿರಿಯ ಗುರುಗಳಾದ ಶ್ರೀ ರಾಮರೆಡ್ಡಿಯ ವರ ಪುಸ್ತಕದ ಬಿಡುಗಡೆ ಸಮಾರಂಭ. ಪುಸ್ತಕದ ಹೆಸರು“ ಚೌಚೌಇಂಗ್ಲೀಷ “.ಇದರಲ್ಲಿ ನಾನು ಗ್ರಹಿಸಿದಂತೆ ಮೂರು ವಿಶೇಷತೆಗಳಿವೆ.ಮೊದಲನೆಯದಾಗಿ ಪುಸ್ತಕದ ಮುನ್ನುಡಿ ಶಿಷ್ಯನಿಂದ ಬರೆಯಲ್ಪಟ್ಟಿರುವುದು.ಎರಡನೇಯದಾಗಿ ಪುಸ್ತಕವು ಲೋಕಾರ್ಪಣೆಗೊಂಡಿದ್ದು ಅವರ ವಿದ್ಯಾರ್ಥಿಗಳ ಹಸ್ತದಿಂದಲೇ,ಹಾಗೂ ಮೂರನೇಯದು ಆಂಗ್ಲಭಾಷೆ ಯನ್ನು ‘ ಕಬ್ಬಿಣದಕಡಲೆ ‘ ಎಂದು ಭಾವಿಸುವ ಸರಕಾರಿ ಕನ್ನಡ ಶಾಲೆಯ ಮಕ್ಕಳಿಗೆ ನೀರುಕುಡಿದಷ್ಟೇ ಸುಲಭವಾಗಿ ತಿಳಿಯುವಂತಿರುವ ವಿವರಣಾ ಶೈಲಿ. ಇಳಿವಯಸ್ಸಿನಲ್ಲೂ ರಾಮರೆಡ್ಡಿ ಗುರುಗಳ ಉತ್ಸಾಹ ಮೆಚ್ಚುವಂಥದ್ದು.ಇಂಥ ಗುರುಗಳಿಗೆ ಶಿಷ್ಯರಾದ ನಾವೇ ಧನ್ಯರು. ಭಾವಸಾಗರದಲ್ಲಿ ತೇಲಿ ಹೋದ ನಮ್ಮನ್ನು ಹೊಟ್ಟೆಯು ತಾಳ ಹಾಕಿ ಬಡಿದೆಬ್ಬಿಸಿತು.ಹಸಿವನ್ನು ತಣಿಸಲು ‘ಜಲೀಲ ಮತ್ತು ತಂಡದವರು’ ಸಜ್ಜಾಗಿನಿಂತಿದ್ದರು.ಶಾಲೆಯ ಪವಿತ್ರ ಮಂದಿರದಲ್ಲಿಯಾವತಾರತಮ್ಯವಿಲ್ಲದೇ ಸಾಲಾಗಿ ಕುಳಿತು ಒಟ್ಟಾಗಿಊಟಮಾಡಿದೆವು.ತಾಯಿಯ ಮಡಿಲಲ್ಲಿ ಕೂತು ಉಂಡಂತೆ ಅನುಭವವಾಯಿತು.ಇದು ಬರಿ ಶಾಲೆಯಲ್ಲ ಮಾತೃಶಾಲೆಯೆಂದೆನಿಸಿತು.ಬಾಲ್ಯದ ಶಾಲಾದಿನಗಳನ್ನು ಮೆಲುಕು ಹಾಕಿಸುವ ಇಂಥ ಗುರುವಂದನಾ‌ ಕಾರ‍್ಯಕ್ರಮ ‘ನ ಭೂತೋ ನ ಭವಿಷ್ಯತಿ’ ಅಂದರೆ ಅತಿಶಯೋಕ್ತಿಯಾಗ ಲಾರದು. ಕನ್ನಡಮಾದ್ಯಮ ಸರಕಾರಿ ಶಾಲೆ ಎಂದು ಕಡೆಗೆಣಿಸುವವರಿಗೆ ಕೃಷ್ಣಾಪುರ (ಬಿಜಾಸ್ಪೂರ) ಶಾಲೆ ಆದರ್ಶಪ್ರಾಯವಾ ಗಿದೆ.ಈ ಶಾಲೆಯಿಂದಕಲಿತ ವಿದ್ಯಾರ್ಥಿಗಳು ಪ್ರತಿಯೊಂದು ರಂಗದಲ್ಲಿ ಉನ್ನತಿ ಪಡೆದ್ದಿದ್ದಾರೆ.ಅಭಿಯಂತರರು,ವೈದ್ಯ ರು,ಉಪನ್ಯಾಸಕರು,ಶಿಕ್ಷಕರು,ಪತ್ರಕರ್ತರು,ಸಾಹಿತಿಗಳು,ಆರಕ್ಷಕರು,ಸಮಾಜಸೇವಕರು,ಸೈನಿಕರು ಇತ್ಯಾದಿ ಹೀಗೆ ದೇಶ ಕಾಯುವ ಮತ್ತು ದೇಶ ಕಟ್ಟುವ ಕ್ಷೇತ್ರದಲ್ಲಿ ಸೇವೆ ಸ ಲ್ಲಿಸುತ್ತಿದ್ದಾರೆ.ಎಲ್ಲಕ್ಕಿಂತ ಮಿಗಿಲಾಗಿ ತಮ್ಮ ಬದುಕನ್ನು ತಾ ವೇ ಸಮರ್ಥವಾಗಿ ಸಾಗಿಸಲು ದೃಢವಾದ ನೆಲೆಯನ್ನು ಕಂ ಡುಕೊಂಡಿದ್ದಾರೆ.ಇಂಥ ಸರಕಾರಿ ಶಾಲೆಗಳೇ ಸಮಾಜದ ಇಂದಿನ ಅವಶ್ಯಕತೆಯೂ ಸಹ. . **************************************************

ಓ ನಮ್ಮ ಶಿಕ್ಷಕ ನೀ ನಮ್ಮ ರಕ್ಷಕ Read Post »

ಅಂಕಣ ಸಂಗಾತಿ, ಮೂರನೇ ಆಯಾಮ

ಅಂಕಪಟ್ಟಿ ಬಾಲ್ಯ ಪುಸ್ತಕ-ಅಂಕಪಟ್ಟಿ ಬಾಲ್ಯಕವಿ- ರವಿರಾಜ ಸಾಗರಪ್ರಕಾಶನ- ಮಾತೋಶ್ರೀ ಈರಮ್ಮ ವಡ್ಡನಕೇರಿ ಪ್ರತಿಷ್ಟಾನ, ಕಮಲಾಪುರಬೆಲೆ-೧೩೦/- ಸ್ಪರ್ಧಾಲೋಕದಿ ಬೇಕೇ ಬೇಕಂತೆತರತರ ಪ್ರಮಾಣ ಪತ್ರಗಳುಕಷ್ಟವಾದರೂ ಮಾಡಲೇ ಬೇಕಂತೆನಾವು ಬಯಸದ ಪಾತ್ರಗಳು    ಇದು ಇಂದಿನ ದಿನಮಾನದ ಎಲ್ಲಾ ಮಕ್ಕಳ ಸಮಸ್ಯೆ. ಮಕ್ಕಳ ಮನಸ್ಸನ್ನು ಯಾರು ಅರ್ಥ ಮಾಡಿಕೊಳ್ಳುತ್ತಾರೆ ಹೇಳಿ? ನಮಗೆ ಹೆಚ್ಚು ಅಂಕಕೊಡುವ ರೋಬೋಟ್ ಬೇಕಿದೆಯೇ ಹೊರತು, ನಮ್ಮಿಂದ ಮುದ್ದಿಸಲ್ಪಟ್ಟು, ನಮ್ಮನ್ನೂ ಪ್ರೀತಿಸುವ ಮಗು ಬೇಕಾಗಿಲ್ಲ. ಎಲ್ಲ ಅಪ್ಪ ಅಮ್ಮಂದಿರಿಂದ ಹಿಡಿದು, ಶಿಕ್ಷಣ ಇಲಾಖೆಯಿಂದ ಹಿಡಿದು ಸಮಾಜದ ಎಲ್ಲರಿಗೂ ಮಗುವಿನ ಅಂಕವೇ ಆ ಮಗುವನ್ನು ಅಳೆಯುವ ಮಾನದಂಡವಾಗಿದೆಯೇ ಹೊರತೂ ಮಗುವಿನ ಮನಃಸ್ಥಿತಿ ಹೇಗಿದೆ? ಅದಕ್ಕೆ ಏನು ಪ್ರೀಯ? ಅದರ ಇಷ್ಟ ಕಷ್ಟಗಳೇನು ಎಂದು ತಿಳಿಯುವ ಒಂದಿಷ್ಟು ಪ್ರಯತ್ನವನ್ನಾದರೂ ನಾವು ಮಾಡಿದ್ದೇವೆಯೇ? ಖಂಡಿತಾ ಇಲ್ಲ. ಇಂದಿನ ಮಕ್ಕಳ ಬಾಲ್ಯ ಅಂಕಪಟ್ಟಿಯ ಮಾರ್ಕುಗಳಲ್ಲಿ ಕಳೆದು ಹೋಗಿದೆ. ಚಿಕ್ಕವನಿನ್ನೂ ಆಟವ ಆಡುಎಂದು ಯಾರೂ ಹೇಳರುಶಾಲೆಗೆ ಫಷ್ಟು ಬರಲೇಬೇಕುಎನ್ನುತ ಒತ್ತಡ ಹೇರುವರು     ಕಾಡು ಬೆಟ್ಟ ಅಲೆದು, ಕಾಡಿನಲ್ಲಿ ಆಯಾ ಸಿಜನ್ನಿನಲ್ಲಿ ಆಗುವ ಹಣ್ಣನ್ನು ಕೊಯ್ದುಕೊಂಡು ತಿನ್ನುವ ನಮ್ಮ ಬಾಲ್ಯ ಈ ಮಕ್ಕಳಿಗೆ ದೊರಕೀತೇ? ಕಾಡಿನ ಹಣ್ಣುಗಳನ್ನೇ ನೋಡಿರದ ಅವು ಏನಾದರೂ ಹಣ್ಣಿಗೆ ಕೈ ಹಚ್ಚಿದರೆ ಸಾಕು, ಹೈಜಿನ್ನಿನ ಪಾಠ ಹೇಳುವ ಮಮ್ಮಿ ಡ್ಯಾಡಿಗಳು ಹೌಹಾರಿ ಬಿಟ್ಟಾರು. ಆದರೆ ನಮ್ಮ ಅಪ್ಪ ಅಮ್ಮಂದಿರಿಗೆ ಮಕ್ಕಳು ಕಾಡಿನ ಯಾವ ಹಣ್ಣು ತಿಂದರೂ ಯಾವ ಅಭ್ಯಂತರವೂ ಇರಲಿಲ್ಲ. ನಾನು ಹಯಸ್ಕೂಲಿಗೆ ಹೋಗುವವರೆಗೂ ನನ್ನ ಶಾಲೆಯ ಬ್ಯಾಗ್ ತುಂಬಾ ಮಳೆಗಾಲದಲ್ಲಿ ಬಿಕ್ಕೆ ಹಣ್ಣು, ಅದರ ಒಡೆದ ಸಿಪ್ಪೆಗಳಿಮದಲೇ ತುಂಬಿರುತ್ತಿತ್ತು. ಅದೇ ಶಾಲೆಯ ಶಿಕ್ಷಕಿಯಾದ ಅಮ್ಮ ಏನಾದರೂ ನನ್ನ ಬ್ಯಾಗ್ ತೆರೆದರೆ ಈ ಟೀಚರ್ರು ಮಗಳಿಗೆ ಹೊಟ್ಟೆಗೇ ಹಾಕೂದಿಲ್ಲ ಅನ್ನೂರು, ಅದೇನ್ ಆ ಚೊಗರು ಕಾಯಿ, ಗಟ್ಟಿ ಹಣ್ಣು ತಿಂತೀಯೇ? ಎಂದು ಬೈಯ್ಯುತ್ತ ಇಡೀ ಚೀಲ ಸ್ವಚ್ಛ ಮಾಡುತ್ತಿದ್ದರು. ಪಿಳ್ಳೆ ಹಣ್ಣು ತಿಂದು ನೀಲಿಗಟ್ಟಿದ ನಾಲಿಗೆಯನ್ನು ಸ್ವಚ್ಛ ಮಾಡಿಕೊಳ್ಳಲು ಪಿಳ್ಳೆ ಹಣ್ಣು ಸುಲಭವಾಗಿ ಸಿಗುತ್ತಿತ್ತು. ಮಳೆಗಾಲ ಮುಗಿದ ತಕ್ಷಣ ಚಳಿಗಾಲದಲ್ಲಿ ಸಂಪಿಗೆ ಹಣ್ಣು, ಮಜ್ಜಿಗೆ ಹಣ್ಣು, ಕೊನೆಗೆ ರಂಜಲು ಹಣ್ಣು ಹೀಗೆ ಎಲ್ಲ ಹಣ್ಣುಗಳು ಆಯಾ ಕಾಲಕ್ಕೆ ತಕ್ಕಂತೆ ನಮ್ಮ ಬ್ಯಾಗ್‌ನಲ್ಲಿ ಜಾಗ ಪಡೆದಿರುತ್ತಿದ್ದವು. ಪರೀಕ್ಷೆ ಮುಗಿಯುತ್ತಿದ್ದಂತೆ ಮಾವಿನ ಮಿಡಿಗಳು ನಮ್ಮಿಂದ ಉಪ್ಪು ಖಾರಾ ಹಾಕಿ ನಾಲಿಗೆಗೆ ಚುರುಕು ಮುಟ್ಟಿಸಲು ಕಾಯುತ್ತಿದ್ದವು. ಹಸಿ ಗೇರು ಬೀಜ ಸುಲಿದು ಕೈಯ್ಯ ಚರ್ಮವೆಲ್ಲ ಸುಲಿದು ಹೋಗುವುದು ಮಾಮೂಲಾಗಿತ್ತು. ಹಾಗೆ ಹಣ್ಣು ಕೊಯ್ಯಲು ಮರ ಹತ್ತಿ, ಕೆಳಗಿರುವ ಗಾಜಿನ ಚೂರಿನ ಮೇಲೆ ಬಿದ್ದು ಆದ ಗಾಯ ಇಂದಿಗೂ ನನ್ನ ಕಾಲಿನ ಮೇಲೆ ಸವಿನೆನಪನ್ನು ಉಳಿಸಿಕೊಂಡಿದೆ. ಆದರೆ ನಮ್ಮ ಮಕ್ಕಳನ್ನು ಹಾಗೆ ಕಾಡು ಸುತ್ತಲು ಬಿಟ್ಟೇವೆಯೇ? ಅವರ ಕಾಲಿಗೊಂದು ಸೊಳ್ಳೆ ಕಚ್ಚಿದರೂ ಜಗತ್ತೇ ತಲೆಕೆಳಗಾದಂತೆ ವರ್ತಿಸುವ ನಮಗೆ ಮಕ್ಕಳ ಬಾಲ್ಯವನ್ನು ಜೈಲಿನಲ್ಲಿಡುತ್ತಿರುವ ಅರಿವೂ ಆಗದಿರುವುದು ವಿಷಾದನೀಯ. ಆದರೆ ರವಿರಾಜ್ ಸಾಗರ ಮಕ್ಕಳ ಮಾತಿಗೆ ಜೀವ ತುಂಬಿದ್ದಾರೆ.  ಹೀಗಾಗಿಯೇ ಈ ಸಂಕಲನದಲ್ಲಿಯಾರು ಕೇಳೋರು ನಮ್ಮ ತಲೆಬಿಸಿಯಾಲೈಪಲ್ಲಿ ಗೆಲ್ಲೋಕೆ ರ್‍ಯಾಂಕೇ ಯಾಕ್ರಯ್ಯಾ?ಎಂದು ಮಕ್ಕಳು ಕೇಳುತ್ತಿದ್ದಾರೆ. ಹೇಳಿ, ಬದುಕನ್ನು ಗೆಲ್ಲಲು ರ್‍ಯಾಂಕ ಒಂದೇ ಆಧಾರವೇ? ವಿಚಿತ್ರ ಎಂದರೆ ಇತ್ತೀಚಿನ ದಿನಗಳಲ್ಲಿ ನಮ್ಮಲ್ಲಿ ಐಎಎಸ್, ಕೆಎಎಸ್ ಪಾಸು ಮಾಡಿದ ಹಲವರು ಚಿಕ್ಕಂದಿನಲ್ಲಿ ರ್‍ಯಾಂಕ್ ಬಂದವರಲ್ಲ. ನಂತರ ಓದಿನ ಮಹತ್ವವನ್ನು ಅರಿತು ತಮ್ಮ ಮಾರ್ಗವನ್ನು ತಾವೇ ನಿರ್ಮಿಸಿಕೊಂಡವರು ಎಂಬುದನ್ನು ಗಮನಿಸಬೇಕಿದೆ.ನಮ್ಮ  ಶಾಲೆಯ ಪುಸ್ತಕದಲ್ಲಿಮಕ್ಕಳ ಹಕ್ಕು ಪಾಠವಿದೆಆ ಪಾಠದ ಪ್ರಶ್ನೆಗೆ ಉತ್ತರಿಸದೆ ಇದ್ದರೆಹೊಡೆಯಲು ಕೋಲು ಕಾಯುತಿದೆಮಕ್ಕಳ ಹಕ್ಕುಗಳು ಕೇವಲ ಓದಿ ಅಂಕಗಳಿಸಲಷ್ಟೇ ಇರುವ ಪಾಠಗಳೇ ಹೊರತೂ ಅದರಿಂದೇನೂ ಆಗುವುದಿಲ್ಲ ಎಂಬುದನ್ನು ಈ ಸಾಲುಗಳು ಚಂದವಾಗಿ ನಿರೂಪಿಸುತ್ತವೆ. ಮೊದಲೆಲ್ಲ ಮಕ್ಕಳಿಗಾಗಿ ಗ್ರಾಮ ಸಭೆ ನಡೆಸುತ್ತಿದ್ದೆವು. ಆಗಲೆಲ್ಲ ಮಕ್ಕಳು ಗಲಾಟೆ ಮಾಡದೇ ಮಾತೆ ಆಡದಂತೆ ಕುಳಿತಿರಬೇಕೆಂದು ಶಾಲೆಯಿಂದ ಗ್ರಾಮ ಪಂಚಾಯತ್‌ಗೆ ಹೊರಡುವ ಮೊದಲೇ ಮಕ್ಕಳಿಗೆ ಎಚ್ಚರಿಕೆ ನೀಡಿ ಕರೆದುಕೊಂಡು ಹೋಗುತ್ತಿದ್ದೆವು. ಎಂಟನೇ ತರಗತಿಯ ಮೊದಲ ಪಾಠವೇ ಎ ಡೇ ಇನ್ ಆಶ್ರಮ’ ರವೀಂದ್ರನಾಥ ಟಾಗೋರರ ಶಾಂತಿನಿಕೇತನದ ಕುರಿತಾಗಿ ಇರುವ ಪಾಠ. ಫಾರ್ಮಲ್ ಹಾಗೂ ಇನ್‌ಫಾರ್ಮಲ್ ಶಿಕ್ಷಣದ ಬಗ್ಗೆ ಚರ್ಚಿಸಿ ಮಕ್ಕಳೆಲ್ಲ ಇನ್‌ಫಾರ್ಮಲ್ ಶಿಕ್ಷಣವೇ ಹೆಚ್ಚು ಅನುಕೂಲ ಎಂದು ತಮ್ಮ ಅಭಿಪ್ರಾಯ ದಾಖಲಿಸಿದ ನಂತರ ‘ಎಲ್ಲರೂ ನಾಳೆ ಕಂಪಲ್ಸರಿ ಪ್ರಶ್ನೋತ್ತರ ಬರೆದು ತನ್ನಿ’ ಎಂದು ದೊಡ್ಡ ಕಣ್ಣು ಬಿಟ್ಟು ಹೇಳಿ, ‘ಗೊತ್ತಲ್ಲ, ನಾಳೆ ನಿಮ್ಮ ಪ್ರಶ್ನೋತ್ತರ ಪಟ್ಟಿ ಕಂಪ್ಲೀಟ್ ಆಗಲಿಲ್ಲ ಎಂದರೆ….’ ಎನ್ನುತ್ತ ಕೈಯ್ಯಲ್ಲಿರುವ ಕೋಲನ್ನು ಅರ್ಥಗರ್ಭಿತವಾಗಿ ನೋಡುತ್ತ ಪಾಠ ಮುಗಿಸುತ್ತೇವೆ. ಅಲ್ಲಿಗೆ ಆ ಪಾಠದ ಉದ್ದೇಶ ಸಫಲವಾದಂತೆ. ಹಾಗಾದರೆ ಪಾಠದ ಪ್ರಶ್ನೋತ್ತರಗಳನ್ನು ನೀಟಾಗಿ ಬರೆದು ಮುಗಿಸಿ ಹೆಚ್ಚು ಅಂಕ ಗಳಿಸೋದು ಮಾತ್ರವೇ ನದುಕಿನ ಸಾರ್ಥಕ್ಯವೇ?ಪರೀಕ್ಷೆಲಿ ಸೋತರೂ ಬದುಕಲ್ಲಿ ಗೆದ್ದೋರುಂಟುಗೆಲ್ಲಬೇಕೆನ್ನುವ ಕನಸು ಎಲ್ಲರಂತೆ ನಮಗುಂಟುನಿಜ. ಮಕ್ಕಳಲ್ಲಿ ತಾವೂ ಗೆಲ್ಲಬೇಕು ಎನ್ನುವ ಹಠ ಇರುತ್ತದೆ. ಕೆಲವರು ಅದಕ್ಕಾಗಿ ಹೆಚ್ಚು ಶ್ರಮ ಹಾಕುತ್ತಾರೆ. ಕೆಲವರು ಶ್ರಮ ಹಾಕದಿದ್ದರೂ ಅವರ ಬುದ್ಧಿಮತ್ತೆಗೆ ಅನುಸಾರವಾಗಿ ಗೆಲ್ಲುತ್ತಾರೆ. ಓದಿದವರು ಮಾತ್ರ ಗೆಲ್ಲುತ್ತಾರೆ ಎನ್ನುವುದು  ಎನ್ನುವುದು ನಿಜವಲ್ಲ. ಓದಿ ಓದಿ ಹೆಚ್ಚು ಅಂಕ ಗಳಿಸಿಯೂ ಜೀವನದಲ್ಲಿ ಗೆಲ್ಲಲಾಗದ ಅನೇಕರನ್ನು ನಾವು ಈಗಾಗಲೇ ಕಂಡಿದ್ದೇವೆ. ಹೆಚ್ಚು ಅಂಕ ಗಳಿಸು ಎಂದು ನಮ್ಮ ಮುಂದಿನ ತಲೆಮಾರನ್ನು ಪೀಡಿಸುವ ನಾವು ನಮ್ಮ ಮುಂದಿನ ಜನಾಂಗಕ್ಕಾಗಿ ಏನು ಬಿಟ್ಟಿದ್ದೇವೆ?ಧರೆಯನ್ನೆಲ್ಲ ಅಗೆದು ಬಗೆದುಸಂಪತ್ತನ್ನೆಲ್ಲ ತಿಂದು ತೇಗಿನಮ್ಮಯ ನಾಳೆಗೆ ಉಳಿಸುವಿರೇನನು?ಹೇಳಿ ಇಲ್ಲಿನ ಮಗು ಕೇಳುತ್ತಿದೆ. ನಮ್ಮ ಮುಂದಿನ ಜನಾಂಗಕ್ಕೆ ನಾವು ಏನನ್ನು ಉಳಿಸಿದ್ದೇವೆ? ಭೂಮಿಯ ಮೇಲಿರುವ ಎಲ್ಲವನ್ನೂ ಕಲುಷಿತಗೊಳಿಸಿದ್ದೇವೆ. ಮರಕಡಿದು, ಕಾಡನ್ನು ನಾಡಾಗಿಸಿದ್ದೇವೆ. ಎಲ್ಲೆಂದರಲ್ಲಿ ವಿಷಯುಕ್ತ ತ್ಯಾಜ್ಯವನ್ನು ಕಾರ್ಖಾನೆಗಳಿಂದಲೂ ಹೊರಬಿಟ್ಟು ಭೂಮಿಯನ್ನು ವಿಷಯುಕ್ತವಾಗಿಸಿದ್ದೇವೆ. ಇಷ್ಟಾದ ನಂತರವೂ ಮಗುವಿನ ಕುರಿತಾದ ಜವಾಬ್ಧಾರಿಯೂ ಇಲ್ಲದೇ ನಮ್ಮದೇ ಲೋಕದಲ್ಲಿ ಮುಳುಗಿ ಹೋಗಿರುವ ತಾಯಿ ತಂದೆಯರಿಗೆ ಮಗು ಕೇಳುವ ಪ್ರಶ್ನೆ ಇದುಅಪ್ಪ ಮೊಬೈಲ್‌ನಲ್ಲಿ, ಅಮ್ಮ ಧಾರಾವಾಹಿಯಲ್ಲಿ ಮುಳುಗಿರುವ ಕುರಿತು ಮಗುವಿಗೆ ಬೇಸರವಿದೆ. ಅಜ್ಜ ಅಜ್ಜಿ ವೃದ್ಧಾಶ್ರಮದಲ್ಲಿರುವಾಗ ತನ್ನ ಜೊತೆ ಆಡಲು ಯಾರಿಲ್ಲವೆಂದು ಮಗು ಕೊರಗುತ್ತದೆ. ಇಷ್ಟಾದರೂ ತಂದೆ ತಾಯಿಗಳು ಹೇಳುವ ಒಳ್ಳೆಯ ವಿಷಯಕ್ಕೆ ಮಕ್ಕಳ ಒಪ್ಪಿಗೆ ಇದ್ದೇಇರುತ್ತದೆ.ಉಳ್ಳವರ ಸೊಕ್ಕನು ಮುರಿದುಬಡವರಿಗೆ ಜೊತೆಯಾಗಿಬಸವಣ್ಣನ ಹಾದ್ಯಾಗೆ ನಡಿಯೋ ಮಗನೆಎನ್ನುವ ಮಾತಿಗೆ ಯಾವ ಮಗುವೂ ಇಲ್ಲ ಎನ್ನುವುದಿಲ್ಲ ಎನ್ನುವ ನಂಬಿಕೆ ಕವಿಗೆ ಇದೆ. ಹೀಗಾಗಿ ಮಕ್ಕಳ ಮೇಲೆ ನಂಬಿಕೆ ಇಟ್ಟು ನಡೆಯುವುದೇ ತಂದೆತಾಯಿಗಳಿಗೆ ಹಿತವಾದದ್ದು. ಮಕ್ಕಳನ್ನು ಅವರದ್ದೆ ಕಲ್ಪನೆಯ ಹಾದಿಯಲ್ಲಿ ಬಿಟ್ಟರೆ ಅವರು ಸೂರ್‍ಯ ಚಂದ್ರರನ್ನೂ ಭೂಮಿಗೆ ತಂದು ಕಟ್ಟಿಡಬಲ್ಲರು. ಮೋಡವನ್ನೂ ನಿಯಂತ್ರಿಸಿ ಕಲ್ಲು ಹೊಡೆದು ಮಳೆ ಸುರಿಸಲೂ ಹಿಂದೆ ಮುಂದೆ ನೋಡರು ಇಂದಿನ ಜನಾಂಗ. ಮೋಡದ ರಾಸಿಗೆಕಲ್ಲು ಹೊಡೆದುಆಲಿಕಲ್ಲನು ರಪರಪ ಕೆಡಗೋಣಬೇಕೆಂದಾಗ ಮಳೆಯನು ಪಡೆದುಧಗೆಯನು ಅಟ್ಟೋಣಎಂದು ಹುಮ್ಮಸ್ಸಿನಿಂದ ಹೇಳುವ ಇಂದಿನ ತಲೆಮಾರಿನ ಹುಮ್ಮಸ್ಸಿಗೆ ಕೊನೆ ಎಲ್ಲಿದೆ.  ಸೂರ್‍ಯನನ್ನೂ ಓಡಿಸಿ ಶಾಸ್ವತವಾಗಿ ಚಂದ್ರನೇ ಬೆಳಕು ನೀಡಲಿ, ಈ ಧಗೆ ಸಹಿಸಲಾಗದು ಎನ್ನುವ ಮಕ್ಕಳಿಗೆ ಚಂದ ತಾರೆಯರ ಚಾಡಿ ಮಾತು ಕೇಳುವ ಅಸಮಧಾನವೂ ಇದೆ. ಮನೆಯಲ್ಲಿ ಅಪ್ಪನ ಕೋಪಕ್ಕೆ ಅಮ್ಮ ಚಾಡಿ ಹೇಳುತ್ತಾಲೆ ಎನ್ನುವ ಮಕ್ಕಳ ಮನಸಿನ ಮಾತು ಇದು ಎಂದೇ ನನಗೆ ಓದಿದಾಗಲೆಲ್ಲ ಅನ್ನಿಸಿದೆ. ಚಾಡಿಯ ಹೇಳಲು  ತಾರೆಗಳೆಲ್ಲನಿನ್ನಯ ಹಿಂದೆಯೇ ಕಾದಿವೆ ನೋಡುಎನ್ನುವ ಮಗು ಪೆನ್ಸಿಲ್ ತಪ್ಪು ಬರೆಯಲು ನೀನೇ ಕಾರಣ ಎಂದು ರಬ್ಬರ್ ಗುರಾಯಿಸುವ ಕನಸನ್ನು ತರಗತಿಯಲ್ಲೂ ಕಾಣುವ ಸಾಮರ್ಥ್ಯ ಹೊಂದಿದೆ. ಮಗುವಿನ ಕಲ್ಪನಾ ಶಕ್ತಿಗೆ ಎಲ್ಲಿದೆ ಮಿತಿ? ಪರಿಸರ ಕಾಳಜಿಯ ಕವನಗಳೂ ಇಲ್ಲಿವೆ. ಗುಬ್ಬಿಯ ಮರಿಗಳು ಕಾಂಕ್ರಿಟ್ ಕಾಡಿನಲ್ಲಿ ದಂಗಾಗಿ ಕುಳಿತಿರುವಾಗ ಗುಬ್ಬಿಯು ತನ್ನ ಸಂಸಾರವನ್ನು ಹಳ್ಳಿಗೆ  ಸಾಗಿಸುತ್ತದೆ. ಅಲ್ಲಿಯೂ ಗಿಡಮರಗಳಿಲ್ಲದ್ದನ್ನು ಕಂಡು ಕಾಡೇ ಉತ್ತಮ ಎನ್ನುತ್ತ ಕಾಡಿನ ಕಡೆ ಮುಖ ಮಾಡುತ್ತದೆ. ಇನ್ನೊಂದೆಡೆ  ಮಳೆಯ ಸುರಿಸಲು ಬಳಿ ಬಾ ಎಂದು ಮೋಡವನ್ನು ಕರೆದರೆ ಕಾಡು ಕಡಿದು, ಭೂಮಿಯನ್ನೆಲ್ಲ ಹೊಲಸು ಮಾಡಿದ್ದನ್ನು ವಿರೋಧಿಸುವ ಮೋಡ, ಹಸಿರು ಬೆಳೆಸಿದರೆ ಖಂಡಿತಾ ಬರುತ್ತೇನೆ ಎನ್ನುತ್ತದೆ. ಹಾಗೆ ಬರುವಾಗಲೇ ಮಿಂಚು, ಗುಡುಗು, ಮಳೆಗೆ ಪೈಪೋಟಿಯೂ ಆಗುತ್ತದೆ. ಮಿಂಚಿನ ಬೆಳಕು ಮೊದಲು ಭೂಮಿಗೆ ತಲುಪುತ್ತದೆ, ಗುಡುಗಿನ ಶಬ್ಧ ನಂತರ ಕೇಳಿದರೆ ಮಳೆ ಮೂರನೆ ಸ್ಥಾನವನ್ನು ಪಡೆಯುತ್ತದೆ. ಇಲ್ಲಿ ಬೆಳಕಿನ ವೇಗ ಶಬ್ಧದ ವೇಗಕ್ಕಿಂತ ಹೆಚ್ಚು ಎನ್ನುವ ಸೂಕ್ಷ್ಮ ಪಾಠವೂ ಅಡಗಿಕೊಂಡಿದೆ. ಮತ್ತೊಂದು ಕವನದಲ್ಲೂ ನದಿಯನ್ನು ಕಂಡು ಪ್ರಾಣಿ ಪಕ್ಷಿಗಳೆಲ್ಲ ಖುಷಿಪಡುತ್ತವೆ. ಆದರೆ ಮನುಷ್ಯ ಮಾತ್ರ ಸುತ್ತಲಿನ ಕಾಡು ಕಡಿದು ಗದ್ದೆ ಮಾಡುತ್ತಾನೆ. ಮಳೆ ಕಡಿಮೆಯಾಗಿ ನದಿ ಒಣಗಿ ಹೋಗುತ್ತದೆ ಎನ್ನುವುದನ್ನು ತಿಳಿಸುತ್ತ ಪ್ರಕೃತಿಯಲ್ಲಿ ಮಾನವನ ಹಸ್ತಕ್ಷೇಪ ಹೆಚ್ಚಾಗಬಾರದು ಎನ್ನುತ್ತಾರೆ. ಹೀಗಾಗಿಯೇ ಪುಟ್ಟನು ದೀಪಾವಳಿ ಹಬ್ಬಕ್ಕೂ ಪಟಾಕಿ ಹೊಡೆಯದೇ ಪರಿಸರದ ಬಗ್ಗೆ ಕಾಳಜಿ ತೋರಿಸುವುದನ್ನು ಚಂದದ ಕವಿತೆಯನ್ನಾಗಿಸಿ ಮಕ್ಕಳ ಮನಸ್ಸಿನಲ್ಲಿ ಪರಿಸರದ ಕುರಿತು ಜಾಗ್ರತಿ ಮೂಡಿಸುತ್ತಾರೆ.  ಅಮ್ಮ  ಇಲಿಯ ಕಾಟ ತಾಳದೆ ವಿಷವಿಕ್ಕಿದ್ದನ್ನೂ ಮಗು ಚಿಕ್ಕಿಲಿಗೆ ಹೇಳುತ್ತ, ಬಡವರ ಗೂಡಿಗೆ ಹೋಗಲೇ ಬೇಡ ಎನ್ನುತ್ತದೆ. ತಮ್ಮನಿಗೂ ತಿಂಡಿ ಕೊಡದೆ ತಿಂದ ಗುಂಡನ ಕೈಯ್ಯಿಂದ ತಿಂಡಿ ಎಗರಿಸಿದ ಕಾಗೆ ತನ್ನೆಲ್ಲ ಬಂದು ಬಳಗವನ್ನು ಕರೆದು ಹಂಚಿಕೊಂಡು ತಿನ್ನುತ್ತದೆ. ಇರುವೆ ಒಗ್ಗಟ್ಟಿನ  ಪಾಠ ಹೇಳುತ್ತದೆ. ಕಾಡಿನಲ್ಲಿ ಸಿಗುವ ರುಚಿರುಚಿಯಾದ ಹಣ್ಣು ಬಿಟ್ಟು ಪೇಟೆಗೆ ಬಂದು ಅಂಗಡಿಯಲ್ಲಿ ಕದಿಯುವ ಮಂಗಗಳ ಕುರಿತು ಮಗು ಪ್ರಶ್ನೆ ಕೇಳುತ್ತ ಕಾಡಿನಲ್ಲಿರುವ ಹಣ್ನಿನ ಮರಗಳನ್ನೆಲ್ಲ ಕಡಿದುದ್ದರ ಕುರಿತು ವಿಷಾದ ವ್ಯಕ್ತ ಪಡಿಸುತ್ತದೆ. ಹೀಗೆ ಪರಿಸರದ ಪಾಠ ಹೇಳುತ್ತಲೆ ಅಡುಗೆ ಮನೆಯ ಆಟಗಾರ ಎಂದು ಮಗುವನ್ನು ಕುರಿತೂ ಹೇಳುವ ಕವಿತೆ ಇಲ್ಲಿದೆ. ಅಪ್ಪನ ಹೊಲದಲ್ಲಿ ದುಡಿಯಬೇಕೆನ್ನುವ, ಮನೆಯಲ್ಲಿ ರೋಬೋಟ್ ಜೊತೆ ಆಡುತ್ತಲೇ ಊರಿನ ತೋಟದಲ್ಲಿ ಏನೇನಿದೆ ಎಂದು ತೋರಿಸಲು ತಂದೆಯನ್ನು ಕರೆಯುವ ಮಗುವಿಗೆ ಅಪ್ಪನಂತೆ ಗಡ್ಡ ಮೀಸೆ ಯಾವಾಗ ಬರುವುದು ಎಂದು ಅಮ್ಮನನ್ನು ಕೇಳುತ್ತ ಎದುರು ನೋಡುತ್ತಿದೆ. ತನ್ನ ಶಾಲೆಯಷ್ಟು ಸುಂದವಾದದ್ದು ಬೇರಿಲ್ಲ ಎನ್ನುತ್ತದೆ. ಕಾಡಿಗೆ ಹೋಗಬಯಸುವ, ಸಂತೆಯಲ್ಲಿ ನಲಿದಾಡಲು ಇಷ್ಟಪಡುವ ಮಗುವಿನ ಮನವಿಗೆ ಹಿರಿಯರೆನ್ನಿಸಿಕೊಂಡ ನಾವು ಸ್ಪಂದಿಸಿದ್ದೇವೆಯೇ?      ಭೀಮಲೀಲೆ ಎನ್ನುವ ಅಂಬೇಡ್ಕರರ ಕುರಿತಾದ ಕವನ ಮಕ್ಕಳನ್ನು ಮುಟ್ಟುವಂತಿದೆ. ಓದು ಬರೆಹ ಕಲಿಯದ ಗೋಣಿ ಬಸವನ ಪಾಡನ್ನು ಕಂಡರೆ ಮಗು ಒಂದಿಷ್ಟಾದರೂ ಓದಬೇಕೆಂದು ಬಯಸುವುದು.ಆಕಾಶವನ್ನೇ ಮುಟ್ಟಬಲ್ಲೆವುಏಣಿಯ ನೀಡಿ ಸಹಕರಿಸಿಎಂದು ತಮ್ಮ ಮೇಲೆ ತಾವೇ ಭರವಸೆಯಿಟ್ಟು ಮಗು ಕೇಳುತ್ತಿದೆ.  ಆಕಾಶಕ್ಕೆ ಏರುವ ಮಗುವಿಗೆ ಏಣಿ ಕೊಟ್ಟು ಬೆನ್ನು ತಟ್ಟಬೇಕಾದದ್ದು ಪಾಲಕರು ಮಾಡಲೇ ಬೇಕಾದ ಕರ್ತವ್ಯ.ಬೆನ್ನು ತಟ್ಟಿ ಬೆಂಬಲಿಸಿಬದುಕ ದಾರಿ ತೋರಿಸಿಸೋತರೂ ಗೆಲ್ಲೋ ಕಲೆಯಕಲೀತೀವಿ ಸಹಕರಿಸಿ  ನಮ್ಮ ಮಕ್ಕಳ ಬೆನ್ನು ತಟ್ಟಿ ಯಾವುದು ಒಲ್ಳೆಯದು, ಯಾವುದು ಕೆಟ್ಟದ್ದು ಎಂದು ತಿಳಿಸಿಕೊಳ್ಳಲೇ ಬೇಕಲ್ಲವೇ? ಇಲ್ಲದೇ ಹೋದರೆ ತಪ್ಪು ಸರಿ ಎನ್ನುವುದರ ಅರಿವಾಗುವುದಾದರೂ ಹೇಗೆ? ಅಂತಹ ತಿಳುವಳಿಕೆ ನೀಡಿಲ್ಲದ್ದರಿಂದಲೇ ಸಮಾಜದಲ್ಲಿ ಇಷ್ಟು ಅನ್ಯಾಯ, ಅತ್ಯಾಚಾರಗಳು ಹೆಚ್ಚುತ್ತಿವೆ. ನಾವು ನೀಡುವ ಪಾಠ ಮಕ್ಕಳಲ್ಲಿ ನೈತಿಕತೆಯನ್ನು ತುಂಬಿದರೆ  ಸಮಾಜ ಖಂಡಿತಾ  ಅಧೋಗತಿಗಿಳಿಯಲಾರದು. ಲಿಂಗತ್ವದ ಕಲ್ಪನೆ ಮಾಡಿಕೊಡುವುದು ಹಾಗೂ ಲಿಂಗಬೇಧ ಮಾಡದಂತೆ ನೋಡಿಕೊಳ್ಳುವುದು ನಮ್ಮದೇ ಕರ್ತವ್ಯ.

Read Post »

ಅಂಕಣ ಸಂಗಾತಿ, ಸಂಪ್ರೋಕ್ಷಣ

ಅಶ್ವತ್ಥಮರದ ಮೇಲೊಂದು ಗುಬ್ಬಿಗೂಡು ಈ ಮರ-ಗಿಡಗಳದ್ದು ಒಂದು ವಿಸ್ಮಯದ ಲೋಕ. ಒಂದಿಂಚು ಕತ್ತರಿಸಿದರೆ ನಾಲ್ಕಾರು ಟಿಸಿಲೊಡೆದು ಚಿಗುರಿಕೊಳ್ಳುವ ಗಿಡ ಕಣ್ಣೆದುರೇ ಮರವಾಗಿ ಬೆಳೆದುಬಿಡುವ ಪ್ರಕ್ರಿಯೆಯೊಂದು ಅಚ್ಚರಿ ಮೂಡಿಸುತ್ತದೆ. ಆ ಬೆಳವಣಿಗೆಯ ಬೆರಗಿನ ಲೋಕದಲ್ಲಿ ದಿನಕ್ಕೊಂದು ಹೊಸ ನೋಟ, ನೋಟದಲೊಂದಿಷ್ಟು ಹೊಸ ಅನುಭವಗಳು ಅವಿತು ಕುಳಿತಿರುತ್ತವೆ. ಹಾಗೆ ಅಡಗಿ ಕುಳಿತ ಅನುಭವಗಳೆಲ್ಲ ಸಮಯ ಸಿಕ್ಕಾಗ ಗಾಳಿ-ಬೆಳಕು-ನೆರಳುಗಳೊಂದಿಗೆ ಮಾತುಕತೆ ನಡೆಸುತ್ತ, ಮಳೆಗೊಂದು ಕೊಡೆ ಹಿಡಿದು ಚಲಿಸುತ್ತ ತಮ್ಮ ಇರುವಿಕೆಯನ್ನು ಗಟ್ಟಿಗೊಳಿಸಿಕೊಳ್ಳುತ್ತವೆ. ಗಾಳಿಯೊಂದಿಗೆ ಹಾರಿಬಂದ ಧೂಳಿನ ಕಣವೊಂದು ಎಲೆಯನ್ನಾಶ್ರಯಿಸಿದರೆ, ಬೆಳಕಿನೊಂದಿಗೆ ಬಿಚ್ಚಿಕೊಳ್ಳುವ ಹೂವಿನ ಎಸಳುಗಳು ದುಂಬಿಯನ್ನು ಸೆಳೆಯುತ್ತವೆ; ನೆರಳ ಹುಡುಕಿ ಬಂದ ನಾಯಿಮರಿಯೊಂದು ಮರದ ಬುಡದಲ್ಲಿ ಕನಸ ಕಾಣುತ್ತ ನಿದ್ರಿಸಿದರೆ, ಎಲೆಗಳನ್ನು ತೋಯಿಸಿದ ಮಳೆ ಹನಿಗಳೆಲ್ಲ ಬೇರಿಗಿಳಿದು ನೆಮ್ಮದಿ ಕಾಣುತ್ತವೆ. ಎಲ್ಲ ಕ್ರಿಯೆಗಳನ್ನೂ ತನ್ನದಾಗಿಸಿಕೊಳ್ಳುವ ಮರದ ಆತ್ಮ ನೆಲದೊಂದಿಗೆ ನಂಟು ಬೆಳಸಿಕೊಂಡು ನಿರಾಳವಾಗಿ ಉಸಿರಾಡುತ್ತದೆ.           ಮರವೊಂದು ಬೆಳೆದುನಿಲ್ಲುವ ರೀತಿಯೇ ಹಾಗೆ! ಪ್ರಪಂಚವೇ ತನ್ನದೆನ್ನುವ ಗತ್ತಿನಲ್ಲಿ, ತುಂಡಾಗಿ ಕತ್ತರಿಸಿದರೂ ಮತ್ತೆ ಚಿಗುರುವ ಆತ್ಮವಿಶ್ವಾಸದಲ್ಲಿ, ನೀರೆರೆಯದಿದ್ದರೂ ಮಳೆಯೊಂದು ಬೀಳುವುದೆನ್ನುವ ಭರವಸೆಯಲ್ಲಿ ಬದುಕು ಕಟ್ಟಿಕೊಳ್ಳುವ ಮರ ಕಲಿಸಿಕೊಡುವ ಪಾಠಗಳು ಹಲವಾರು. ಸುತ್ತ ಬದುಕುವವರ ಉಸಿರಾಟಕ್ಕೆ ನೆರವಾಗುತ್ತ, ಕಾಲಕಾಲಕ್ಕೆ ಚಿಗುರಿ ಹೂವು-ಹಣ್ಣುಗಳಿಂದ ನಳನಳಿಸುತ್ತ, ಆಗಾಗ ಭೇಟಿ ನೀಡುವ ಪ್ರಾಣಿ-ಪಕ್ಷಿಗಳನ್ನು ಪ್ರೀತಿಸುತ್ತ, ಮೊಟ್ಟೆಯೊಂದು ಕಣ್ಣುತೆರೆವ ಕ್ಷಣಕ್ಕೆ ಸಾಕ್ಷಿಯಾಗುತ್ತ ತನ್ನದೇ ಜಗತ್ತನ್ನು ಸೃಷ್ಟಿಸಿಕೊಂಡು ಬಾಳಿಬದುಕುವ ಮರ ನಿಸ್ವಾರ್ಥ ಪ್ರಜ್ಞೆಯ ದೃಷ್ಟಾಂತವಾಗಿ ನಿಲ್ಲುತ್ತದೆ. ಮರದ ಸಂವೇದನೆಗೆ ಜಾಗ ನೀಡುವ ನೆಲ ತಾಯಿ ಬೇರಿನೊಂದಿಗೆ ಮಗುವಾಗಿ, ಮಕ್ಕಳನ್ನು ಸಲಹುವ ತಾಯಿಯೂ ಆಗಿ ತನ್ನ ಕರ್ತವ್ಯವನ್ನು ಪೂರೈಸುತ್ತದೆ. ಬೇರು ತನ್ನನ್ನು ಆಶ್ರಯಿಸಿದ ಅಹಂಭಾವದ ಮದ ನೆಲದ ತಲೆಗೇರುವುದಿಲ್ಲ; ಹೂವಾಗಿ ಅರಳುವ ಮೊಗ್ಗಿನ ಕನಸನ್ನು ಬೆಳಕು ತುಂಡರಿಸುವುದಿಲ್ಲ; ಉದುರಿಬಿದ್ದ ಎಸಳುಗಳು ಗಾಳಿಯನ್ನು ಶಪಿಸುವುದಿಲ್ಲ; ಸುರಿವ ಮಳೆ ಚಿಗುರಿಸಿದ ಎಲೆಗಳ ಲೆಕ್ಕವಿಡುವುದಿಲ್ಲ. ಹೀಗೆ ಎಲ್ಲ ಭೌತಿಕ ಲೆಕ್ಕಾಚಾರ, ವ್ಯವಹಾರಗಳಾಚೆ ನಿಲ್ಲುವ ಮರ-ಗಿಡಗಳ ಅನನ್ಯ ಲೋಕ ತರ್ಕಗಳನ್ನೆಲ್ಲ ತಲೆಕೆಳಗಾಗಿಸುತ್ತ ಅನಾವರಣಗೊಳ್ಳುತ್ತದೆ.           ನಮ್ಮ ಸುತ್ತಲಿನ ಪ್ರಪಂಚ ಅನನ್ಯವೆನ್ನುವ ಭಾವನೆ ಮೂಡುವುದು ಅಲ್ಲಿನ ಚಟುವಟಿಕೆಗಳ ನಿರಂತರ ಜೀವಂತಿಕೆಯಿಂದ. ಬರಿಯ ಮಾತಿಗೆ ನಿಲುಕದ, ಒಮ್ಮೊಮ್ಮೆ ವಿವೇಚನೆಗೂ ಎಟುಕದ ಅದೆಷ್ಟೋ ಸಂಗತಿಗಳು ಆವರಣಕ್ಕೊಂದು ವಿಶಿಷ್ಟವಾದ ಸೌಂದರ್ಯವನ್ನು ಒದಗಿಸುತ್ತವೆ. ಆ ಆವರಣದೊಳಗಿನ ಮಾಧುರ್ಯ ಬದುಕಿನ ಒಂದು ಭಾಗವಾಗಿ ನಮ್ಮೊಳಗೆ ಬೇರುಬಿಟ್ಟು, ಹೊಸಹೊಸ ರಾಗಗಳಾಗಿ ಚಿಗುರೊಡೆಯುತ್ತಿರುತ್ತದೆ. ಹಾಗೆ ಗುನುಗುನಿಸುವ ಅಮೂರ್ತ ಸ್ವರಗಳಲ್ಲಿ ಅಶ್ವತ್ಥಕಟ್ಟೆಯೂ ಒಂದು. ಅಜಾನುಬಾಹು ಶರೀರದ, ದೊಡ್ಡ ಕಿರೀಟ ತೊಟ್ಟ ಮಹಾರಾಜನಂತೆ ವಿರಾಜಿಸುವ ಅಶ್ವತ್ಥಮರದ ಕಟ್ಟೆಯೆಂದರೆ ಅದೊಂದು ಸುಭಿಕ್ಷತೆ-ಸಮೃದ್ಧಿಗಳ ಅರಮನೆಯಿದ್ದಂತೆ. ಅಲ್ಲೊಂದು ಮಣ್ಣಿನ ಹಣತೆ ಲಯಬದ್ಧವಾಗಿ ಉರಿಯುತ್ತ ಕತ್ತಲೆಯ ದುಗುಡವನ್ನು ಕಡಿಮೆ ಮಾಡುತ್ತಿರುತ್ತದೆ; ಕಟ್ಟೆಯನ್ನೇರುವ ಮೆಟ್ಟಿಲುಗಳ ಆಚೀಚೆ ಬಿಡಿಸಿದ ಪುಟ್ಟ ಹೂಗಳ ರಂಗೋಲಿಯ ಮೇಲಿನ ಅರಿಸಿನ-ಕುಂಕುಮಗಳು ಬೆಳಗಿನ ಸೂರ್ಯನ ಕಿರಣಗಳಿಗೆ ಹೊಳೆದು ಬಣ್ಣದ ಲೋಕವನ್ನು ತೆರೆದಿಡುತ್ತವೆ; ಸೆರಗನ್ನು ಸೊಂಟಕ್ಕೆ ಸಿಕ್ಕಿಸಿಕೊಂಡು ಭಕ್ತಿಯಿಂದ ಮರವನ್ನು ಸುತ್ತುವ ತಾಯಿಯ ಹಿಂದೊಂದು ಪುಟ್ಟ ಮಗು ಕಾಲ್ಗೆಜ್ಜೆಯ ಸದ್ದು ಮಾಡುತ್ತ ನೆರಳಿನೊಂದಿಗೆ ಆಟವಾಡುತ್ತದೆ; ಮಾಗಿ ಉದುರಿದ ಹಣ್ಣುಗಳೆಲ್ಲ ಆಕಾಶದಿಂದ ಬಿದ್ದ ನಕ್ಷತ್ರಗಳಂತೆ ಭಾಸವಾಗಿ ಅಶ್ವತ್ಥಕಟ್ಟೆಗೊಂದು ದಿವ್ಯವಾದ ಸೌಂದರ್ಯ ಪ್ರಾಪ್ತಿಯಾಗುತ್ತದೆ.           ಹೀಗೆ ಸೌಂದರ್ಯವೆನ್ನುವುದು ಒಮ್ಮೆ ಮರದಡಿಯ ನೆರಳಾಗಿ, ಮತ್ತೊಮ್ಮೆ ಮರದ ಮೇಲಿನ ಹಣ್ಣಾಗಿ, ಸುಶ್ರಾವ್ಯ ಸ್ವರದಂತೆ ನೆಲಕ್ಕಿಳಿವ ಎಲೆಯಾಗಿ ಬಸ್ ಸ್ಟಾಪಿನಲ್ಲಿ ಬಸ್ಸಿಗಾಗಿ ಕಾಯುತ್ತಿರುವವರ ಬೆಳಗಿನೊಂದಿಗೆ ಬೆರೆತು ನೆನಪಿನಲ್ಲಿ ನೆಲೆಗೊಳ್ಳುತ್ತದೆ. ಹಾಗೆ ಕಾಯುತ್ತಿರುವವರ ಪರ್ಸಿನಲ್ಲೊಂದು ಮರದ ತೊಟ್ಟಿಲಿನಲ್ಲಿ ಮಲಗಿ ಹಾಯಾಗಿ ನಿದ್ರಿಸುತ್ತಿರುವ ಪುಟ್ಟ ಮಗುವಿನ ಕಪ್ಪು-ಬಿಳುಪು ಭಾವಚಿತ್ರ ಬಣ್ಣದ ಕನಸುಗಳನ್ನು ಚಿತ್ರಿಸುತ್ತಿರಬಹುದು; ವೀಳ್ಯದೆಲೆ ಮಾರುವವನ ಗೋಣಿಚೀಲದೊಳಗೆ ಶಿಸ್ತಿನಿಂದ ಕುಳಿತ ಎಲೆಗಳು ಬಾಡಿಹೋಗುವ ಭಯವಿಲ್ಲದೇ ಒಂದಕ್ಕೊಂದು ಅಂಟಿಕೊಂಡಿರಬಹುದು; ಕಾಲೇಜು ಹುಡುಗಿಯ ಪುಸ್ತಕದೊಳಗಿನ ಒಣಗಿದ ಗುಲಾಬಿ ಎಲೆಗಳ ನೆನಪು ಸದಾ ಹಸಿರಾಗಿ ಚಿಗುರುತ್ತಿರಬಹುದು; ಹೈಸ್ಕೂಲು ಹುಡುಗನ ಡ್ರಾಯಿಂಗ್ ಹಾಳೆಯ ಮೇಲಿನ ಅಶ್ವತ್ಥಎಲೆಯೊಂದು ಬಣ್ಣ ತುಂಬುವ ಪೀರಿಯಡ್ಡಿಗಾಗಿ ಕಾಯುತ್ತಿರಬಹುದು; ಅಮ್ಮನಮನೆಯ ದೇವರಕಾರ್ಯಕ್ಕೆಂದು ಬಸ್ಸನ್ನೇರುತ್ತಿರುವ ಪ್ಲಾಸ್ಟಿಕ್ ಕವರಿನ ಮುಷ್ಟಿಮಣ್ಣಿನಲ್ಲಿ ನಾಗದಾಳಿಯ ಚಿಗುರೊಂದು ಬೇರುಬಿಡುತ್ತಿರಬಹುದು. ಹಾಗೆ ಪ್ರತಿದಿನವೂ ಚಲಿಸುವ ಬೆಳಗುಗಳಿಗೆ ಸಾಕ್ಷಿಯಾಗುವ ಬಸ್ ಸ್ಟಾಪಿನೆದುರಿಗಿನ ಮರ ಮಾತ್ರ ನಿಂತಲ್ಲಿಯೇ ಬೆಳೆಯುತ್ತ, ಹೊಸ ಗೂಡುಗಳಿಗೆ ಆಶ್ರಯ ನೀಡುತ್ತ ನೆನಪುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ.           ಈ ನೆನಪುಗಳು ಬೇರುಬಿಡುವ ವಿಧಾನವೂ ವಿಶಿಷ್ಟವಾದದ್ದು. ಮನದಾಳಕ್ಕೆ ಬೇರನ್ನಿಳಿಸದ ನೆನಪುಗಳು ಮುಗುಳ್ನಗೆಯ ಖಾಸಗಿ ಕ್ಷಣಗಳನ್ನು ತಮ್ಮದಾಗಿಸಿಕೊಳ್ಳಲಾರವು. ನಗಣ್ಯವೆನ್ನಿಸುವ ಎಷ್ಟೋ ಸಂಗತಿಗಳು ಕಾಲಕಳೆದಂತೆ ಅತ್ಯಮೂಲ್ಯವೆನ್ನುವಂತಹ ನೆನಪುಗಳಾಗಿ ಬದಲಾಗುವುದುಂಟು; ಅಪರೂಪದ್ದೆನ್ನುವಂತಹ ಘಟನೆಗಳೂ ಕೆಲವೊಮ್ಮೆ ಕೇವಲ ಫೋಟೋ ಆಲ್ಬಮ್ಮುಗಳಲ್ಲೋ, ಮೊಬೈಲ್ ಗ್ಯಾಲರಿಯ ಯಾವುದೋ ಮೂಲೆಯಲ್ಲೋ ಉಳಿದುಹೋಗುವುದುಂಟು. ತೋಟದಂಚಿನ ಹೊಳೆಯಲ್ಲಿ ಸ್ನಾನದ ಟವೆಲ್ಲಿನಿಂದ ಹಿಡಿದ ಮೀನಿನ ಮರಿಗಳನ್ನು ಮನೆಯ ಪಕ್ಕದ ಕೆರೆಗೆ ತಂದು ಬಿಡುತ್ತಿದ್ದ ಕಾಲಹರಣದ ಕೆಲಸವೊಂದು ಎಂದೆಂದಿಗೂ ಮರೆಯಲಾಗದ ನೆನಪುಗಳ ಸಾಲಿನಲ್ಲಿ ಸೇರಿಕೊಳ್ಳಬಹುದೆಂಬ ಯೋಚನೆ ಕೂಡಾ ಬಾಲ್ಯಕ್ಕೆ ಇರಲಿಕ್ಕಿಲ್ಲ. ಸೂರ್ಯೋದಯದ ಫೋಟೋದ ಹಿಂದೆ ಮನೆ ಮಾಡಿಕೊಂಡಿದ್ದ ಗುಬ್ಬಚ್ಚಿಯ ಸಂಸಾರವೊಂದು ದಿನ ಬೆಳಗಾಗುವಷ್ಟರಲ್ಲಿ ಜಗುಲಿಯನ್ನು ತೊರೆದು ಹಾರಿಹೋಗುವುದಕ್ಕಿಂತ ಮುಂಚೆ, ಬದುಕಿನ ಅತಿ ಸುಂದರ-ರೋಮಾಂಚಕ ದೃಶ್ಯಗಳೆಲ್ಲ ಕ್ಷಣಾರ್ಧದಲ್ಲಿ ನೆನಪುಗಳಾಗಿ ರೂಪ ಬದಲಾಯಿಸಿಬಿಡಬಹುದೆನ್ನುವ ಕಲ್ಪನೆ ಯಾರ ಕಣ್ಣಳತೆಗೂ ದಕ್ಕಿರಲಿಕ್ಕಿಲ್ಲ. ಗೇರುಮರಕ್ಕೆ ಆತುಕೂತು ಇಂಗ್ಲಿಷ್ ಪದ್ಯವನ್ನು ಬಾಯಿಪಾಠ ಮಾಡಿದ್ದು, ಅತ್ತಿಮರದ ಬೇರಿನ ಮೇಲೆ ಕುಳಿತು ಹೊಳೆಯ ನೀರಿನಲ್ಲಿ ಕಾಲುಗಳನ್ನು ಇಳಿಬಿಟ್ಟು ಡೆಬಿಟ್ಟು-ಕ್ರೆಡಿಟ್ಟುಗಳನ್ನು ಬ್ಯಾಲೆನ್ಸ್ ಮಾಡಿದ್ದು ಹೀಗೆ ಎಲ್ಲ ನೆನಪುಗಳೂ ನೆಲದಾಳಕ್ಕೆ ಬೇರುಬಿಟ್ಟು ನೆಮ್ಮದಿಯ ಬದುಕು ಕಾಣುತ್ತವೆ.           ಹಾಗೆ ಬೇರುಬಿಟ್ಟ ಬದುಕು ನೆಲದುದ್ದಕ್ಕೂ ಹರಡಿಕೊಂಡು ಗಿಡವಾಗಿ ಚಿಗುರಿ, ಮರವಾಗಿ ಬೆಳೆದು ನಿಲ್ಲುತ್ತದೆ. ಹಾಗೆ ಬೆಳೆದು ನಿಂತ ಮರದ ರೆಂಬೆಯಲ್ಲೊಂದು ಕನಸುಗಳ ಜೋಕಾಲಿ ಕುಳಿತವರನ್ನೆಲ್ಲ ಜೀಕುತ್ತಿರುತ್ತದೆ; ಪೊಟರೆಯಲ್ಲೊಂದು ಪುಟ್ಟ ಹೃದಯ ಬಚ್ಚಿಟ್ಟ ಭಾವನೆಗಳೊಂದಿಗೆ ಬೆಚ್ಚಗೆ ಕುಳಿತಿರುತ್ತದೆ; ಜಗದ ಸದ್ದಿಗೆ ತಲ್ಲಣಗೊಳ್ಳದ ಎಲೆ ಆಗಸದೆಡೆಗೆ ಮುಖ ಮಾಡಿ ಭರವಸೆಯನ್ನು ಚಿಗುರಿಸುತ್ತದೆ; ಜೀವಶಕ್ತಿಯ ಮೋಹಕ ಕುಂಚ ಒಡಮೂಡಿದ ಮೊಗ್ಗಿನ ಮೇಲೆ ಬಣ್ಣದ ಎಳೆಗಳನ್ನೆಳೆಯುತ್ತದೆ; ಅರಳಿದ ಹೂವಿನ ಗಂಧ ಗಾಳಿಯೊಂದಿಗೆ ಬೆರೆತು ಹಗುರಾಗಿ ತೇಲುತ್ತ ಮೈಮರೆಯುತ್ತದೆ; ಬಲಿತ ಬೀಜ ಬಯಲ ಸೇರುವ ಹೊತ್ತು ಜಗುಲಿಯಿಂದ ಹಾರಿಬಂದ ಗುಬ್ಬಿಯ ಗೂಡು ಮರದ ಮಡಿಲು ಸೇರುತ್ತದೆ. ******************************** ಮೂಲತ: ಉತ್ತರ ಕನ್ನಡದವರಾದ ಅಂಜನಾ ಹೆಗಡೆಯವರು ಸದ್ಯ ಬೆಂಗಳೂರಲ್ಲಿ ನೆಲೆಸಿರುತ್ತಾರೆ. ‘ಕಾಡ ಕತ್ತಲೆಯ ಮೌನ ಮಾತುಗಳು’ ಇವರು ಪ್ರಕಟಿಸಿದ ಕವನಸಂಕಲನ.ಓದು ಬರಹದ ಜೊತೆಗೆ ಗಾರ್ಡನಿಂಗ್ ಇವರ ನೆಚ್ಚಿನ ಹವ್ಯಾಸ

Read Post »

ಕಾವ್ಯಯಾನ

ಟೈಂ ಮುಗಿಸಿದ ಸಮಯ…..

ಕವಿತೆ ಡಾ.ಪ್ರೇಮಲತ ಬಿ ಕೆಲವರಿಗೆ ಸಮಯವಿರುವುದಿಲ್ಲಸಮಯ ಮಾಡಿಕೊಳ್ಳಲು ಸಮಯ ಸಾಕಾಗುವುದಿಲ್ಲನನ್ನ ಬಳಿ ಬಹಳ ಸಮಯವಿದೆಆಳ ಗೆರೆಗಳ ನನ್ನ ಕೈ ಖಾಲಿಯಿದೆ ಹಾಗೆಂದೇ ಸಮಯವನ್ನು ಕೊಲ್ಲಲು ನನ್ನ ಬಳಿಅಸಾಧ್ಯ ಸಾಧ್ಯತೆಗಳಿವೆ ಆದರೆಹಾಗೊಮ್ಮೆ, ಹೀಗೊಮ್ಮೆ ತೂಗುವ ಲೋಲಕದನನ್ನ ಗಡಿಯಾರಕ್ಕೆ ಮುಳ್ಳುಗಳಿಲ್ಲ ಅನಂತ ಚಲನೆಗಳ ಸಂವೇದನೆಯಿಲ್ಲಕೊಂದದ್ದೇನು ತಿಳಿಯುವುದಿಲ್ಲಟಿಕ್-ಟಿಕ ನೆಂದು ಉಲಿದು ಹೇಳಲುನನ್ನೆದೆ ಗಡಿಯಾರಕ್ಕೆ ಧ್ವನಿಯಿಲ್ಲ ರಸ್ತೆಯಲಿ ನಿಂತ ಒಂಟಿ ಜೀವಸಂತೆಯಲ್ಲಿದ್ದರೂ ಕೇಳುವ ನಿರಂತರ ಮೌನಸಮಯದ್ದೇನು ನನಗೆ ಮುಲಾಜುಸಮಯ ಪ್ರಜ್ಞೆಆಳುವುದಿಲ್ಲ ಅವಸರ ಬದುಕ ಕಾಡುವುದಿಲ್ಲಸಮಯ ಕೊಂದ ಪಾಪಪ್ರಜ್ಞೆಯಿಲ್ಲಅರ್ಥಗಳ ಟೈಂ ಮುಗಿಸಿದ ಸಮಯ ನನ್ನೆದುರು ಈಗ ಸತ್ತು ಬಿದ್ದಿದೆಯಲ್ಲ ! **************************************

ಟೈಂ ಮುಗಿಸಿದ ಸಮಯ….. Read Post »

ಕಾವ್ಯಯಾನ

ನೈವೇದ್ಯ

ಕವಿತೆ ನೈವೇದ್ಯ ಡಾ.ಕಾತ್ಯಾಯಿನಿ ಕುಂಜಿಬೆಟ್ಟು. ಮೂರು ಕಲ್ಲುಗಳ ಒಲೆನನ್ನ ಮನಸ್ಸು!ಹಳದಿ ಮೈಯ ಕೆಂಪು ನಾಲಗೆಯನ್ನುಊರ್ಧ್ವಕ್ಕೆ ಕೊರಳುದ್ದಕ್ಕೂ ಚಾಚಿ ಚಾಚಿಕಾಯಮಡಕೆಯನ್ನು ನೆಕ್ಕುತ್ತಿರುತ್ತದೆಬೆಂಕಿಬಾಳು! ಒಂದು ದೀರ್ಘ ಕಾಯುವಿಕೆಯಲ್ಲಿಪ್ಲುತಕಾಲಗಳ ಬೇಯುವಿಕೆ…ಅಕ್ಕಿ ಗುಳುಗುಳು ಕುದಿಯುತ್ತ ಅಂಗುಳಅಗುಳು ಅಗುಳೂ ಅನ್ನವಾಗುತ್ತದೆಆಹಾ! ಉದುರುದುರು ಮಲ್ಲಿಗೆ ಹೂವು!ಬಟ್ಟಲು ತುಂಬ ಹರಿದಾಡುವ ಮುತ್ತು!ಅನ್ನ ಜೀವವಾಗುತ್ತದೆ… ಪರಮ ಅನ್ನ! ಬ್ರಹ್ಮ ವಿಷ್ಣು ಮಹೇಶ್ವರ ಪುಟುಪುಟುಅಂಬೆಗಾಲಿಡುತ್ತಿದ್ದಾರೆ…ಚಿಗುರು ಬೆರಳ ಚುಂಚದಲ್ಲಿ ಹೆಕ್ಕಿ ಹೆಕ್ಕಿಬಾಯಿ ಬ್ರಹ್ಮಾಂಡದಲ್ಲಿ ತುಂಬಿಕೊಳ್ಳಲು!ಒಬ್ಬನ ಕೈಯ ಕೆಂದಾವರೆಗೆಮತ್ತೊಬ್ಬನ ಹೊಕ್ಕುಳ ಕುಂಡದ ದಂಟಲ್ಲಿ ನಗುಹುಟ್ಟಿಗೆ ಬದುಕಿನ ನಂಟು!ಹೊಕ್ಕುಳಬಳ್ಳಿ… ಅಮೃತಬಳ್ಳಿ! ಮಗದೊಬ್ಬನ ನೊಸಲಲಿ ಒಲೆಯಬೂದಿಯೆ ವಿಭೂತಿ! ಕಾಯಮಡಕೆಯಲ್ಲಿನನ್ನ ಪ್ರಾಣವೀಗಅನ್ನ ನೈವೇದ್ಯ! ***************************

ನೈವೇದ್ಯ Read Post »

ಪುಸ್ತಕ ಸಂಗಾತಿ

ಪುಸ್ತಕ ಪರಿಚಯ

ನಾದಾನುಸಂಧಾನ (ಅಂಕಣ ಬರಹಗಳ ಸಂಗ್ರಹ) ಪುಸ್ತಕದ ಹೆಸರು: ನಾದಾನುಸಂಧಾನ (ಅಂಕಣ ಬರಹಗಳ ಸಂಗ್ರಹ)ಲೇಖಕರು: ಆಶಾಜಗದೀಶ್ಪುಟಗಳು: 200ಬೆಲೆ: 220/-ಪ್ರಕಾಶನ: ಸಾಹಿತ್ಯ ಲೋಕ ಪ್ರಕಾಶನ, ಬೆಂಗಳೂರುಪ್ರಕಾಶಕರ ಹೆಸರು ಮತ್ತು ದೂರವಾಣಿ: ರಘುವೀರ್, 9945939436 ಕವಯಿತ್ರಿ, ಅಂಕಣಕಾರ್ತಿ ದೀಪಾ ಹಿರೇಗುತ್ತಿ ಯವರು ಹೀಗೆ ಬರೆಯುತ್ತಾರೆ: ಆಶಾ ನಮ್ಮ ನಡುವಿನ ಪ್ರತಿಭಾವಂತ ಲೇಖಕಿ. ಕಥೆ, ಕವನ, ಅಂಕಣ ಈ ಮೂರೂ ಪ್ರಕಾರಗಳಲ್ಲಿ ಯಶಸ್ವಿಯಾಗಿ ಬರೆಯುತ್ತಿದ್ದಾರೆ. ತಮ್ಮ ಶಾಲೆ ಮತ್ತು ಕೌಟುಂಬಿಕ ಜವಾಬ್ದಾರಿಗಳ ನಡುವೆ ನಿರಂತರವಾಗಿ ಬರೆಯುತ್ತಿರುವ ಆಶಾ ಅಚ್ಚರಿ ಹುಟ್ಟಿಸುತ್ತಾರೆ. “ನಾದಾನುಸಂಧಾನ” ಎಂಬ ಈ ಬರಹಗಳ ಗುಚ್ಛದ ವಿಷಯ ವೈವೀಧ್ಯತೆ ಅವರ ಓದಿನ ವಿಸ್ತಾರಕ್ಕೆ ಸಾಕ್ಷಿ. ಹಿರಿಯ, ಸಮಕಾಲೀನ ಬರಹಗಾರರ ಲೇಖನ, ಕಥೆ, ಕಾದಂಬರಿ, ಕವಿತೆಗಳನ್ನು ಓದಿ ವಿಶ್ಲೇಷಿಸಿ ಅವುಗಳ ಬಗ್ಗೆ ಬಹು ಆಪ್ತವಾಗಿ ಬರೆಯುತ್ತಾರೆ. ಜೊತೆಗೆ ತಮ್ಮ ಅನುಭವಗಳನ್ನು ದಾಖಲಿಸುತ್ತಾ ಒಂದು ವಿಶಿಷ್ಟ ಎನ್ನಬಹುದಾದ ಶೈಲಿಯನ್ನು ರೂಢಿಸಿಕೊಂಡಿದ್ದಾರೆ. ಆಶಾ ಓರ್ವ ಸ್ನೇಹಮಯಿ ಸಹೃದಯಿ ಕವಯಿತ್ರಿ ಎಂಬುದನ್ನು ಸಾಬೀತುಪಡಿಸುವ ಗದ್ಯ ಅವರದ್ದು…. *************************************

ಪುಸ್ತಕ ಪರಿಚಯ Read Post »

ಇತರೆ

ಕಸಾಪಗೆ ಮಹಿಳಾ ಅಧ್ಯಕ್ಷರು

ಚರ್ಚೆ ಕಸಾಪಗೆ ಮಹಿಳಾ ಅಧ್ಯಕ್ಷರು ಒಂದು ಚರ್ಚೆ ಮೆಲ್ಕಂಡವಿಷಯವಾಗಿ ಸಂಗಾತಿ ಪತ್ರಿಕೆ ಕನ್ನಡದ ಬರಹಗಾರರಿಗೆ ಕೆಲವು ಪ್ರಶ್ನೆಗಳನ್ನು ಹಾಕಿತ್ತು ಅದಕ್ಕೆ ಬಂದ ಉತ್ತರಗಳನ್ನು ಇಲ್ಲಿ ಒಂದೊಂದಾಗಿಪ್ರಕಟಿಸಲಾಗುತ್ತಿದೆ. ಸಂಗಾತಿ ಕೇಳಿದ ಪ್ರಶ್ನೆಗಳು ಪ್ರಶ್ನೆ ಒಂದು,ಇದಕ್ಕಿರುವ ಕಾರಣಗಳೇನು?ಇದನ್ನು ಹೇಗೆ ವಿಶ್ಲೇಷಿಸುತ್ತೀರಿ? ಪ್ರಶ್ನೆ ಎರಡು,ಸಮಾನತೆಯ ಈ ಯುಗದಲ್ಲಿ ಮಹಿಳೆಯೊಬ್ಬರು ಅಧ್ಯಕ್ಷರಾಗುವುದು ಸಾದ್ಯವೆಂದು ನಂಬುವಿರಾ?ಸಾದ್ಯವೆಂದಾದರೆ ಹೇಗೆ? ಪ್ರಶ್ನೆ ಮೂರು,ಮಹಿಳೆಯೊಬ್ಬರು ಅಧ್ಯಕ್ಷರಾಗದಂತೆ ತಡೆಯುವ ಶಕ್ತಿಗಳನ್ನು ಹೇaaಗೆ ಎದುರಿಸಬಹುದು? ಪ್ರಶ್ನೆ ನಾಲ್ಕು, ಮಹಿಳೆಗೆ ಈ ಅಧ್ಯಕ್ಷಸ್ಥಾನ ಮೀಸಲಾತಿ ರೂಪದಲ್ಲಿ ಸಿಗಬೇಕೆಂದು ಬಯಸುವಿರಾ ಇಲ್ಲ ಚುನಾವಣೆಯ ಮೂಲಕವೇ ದೊರೆಯಬೇಕೆಂದು ಬಯಸುವಿರಾ? ಪ್ರಶ್ನೆ ಐದು, ಈ ನಿಟ್ಟಿನಲ್ಲಿ ಮಹಿಳಾ ಅಧ್ಯಕ್ಷರ ಪರ ಒಲವಿರುವ ಪುರುಷ ಮತ್ತು ಮಹಿಳೆಯರು ಯಾವ ರೀತಿಯ ಹೆಜ್ಜೆಗಳನ್ನು ಇಡಬೇಕು ವಿನುತಾ ಹಂಚಿನಮನಿ ಸ್ಥಾಪನೆಯಾಗಿ ಶತಮಾನಗಳಾದರು ರಾಜ್ಯ ಕಸಾಪಗೆ ಮಹಿಳೆಯೊಬ್ಬರು ಇದುವರೆಗು ಅದ್ಯಕ್ಷರಾಗಿಲ್ಲ‌. ಪ್ರಶ್ನೆ ಒಂದು,ಇದಕ್ಕಿರುವ ಕಾರಣಗಳೇನು?ಇದನ್ನು ಹೇಗೆ ವಿಶ್ಲೇಷಿಸುತ್ತೀರಿ? ಮಹಿಳೆಯರ ಅನಾಸಕ್ತಿ, ಹಿಂಜರಿತ ಮೊದಲನೆಯದಾದರೆ, ಪುರುಷರ ಅಧಿಕಾರಿಶಾಹಿ ಪ್ರವೃತ್ತಿ ಎರಡನೆಯದು. ಮಹಿಳೆ ಯಾವತ್ತೂ ಹೋರಾಟ ಮಾಡಿಯೇ ಹಕ್ಕುಗಳನ್ನು ಪಡೆದಿರು ಇತಿಹಾಸವಿರುವಾಗ ಈಗ ಈ ಕ್ಷೇತ್ರದಲ್ಲಿ ಅಂತಹ ಕಾಲ ಬಂದಿದೆ. ಮನೆ ಮಕ್ಕಳು ಅಂತ ತನ್ನ ಚಿಪ್ಪಿನಲ್ಲಿ ಜವಾಬ್ದಾರಿಯನ್ನು ನಿರ್ವಹಿಸುವವಳು ಹೊರಗಿನ ಲೋಕದಲ್ಲಿಯೂ ಸಮಾನತೆಯನ್ನು ಕೇಳುತ್ತಿರುವುದು ಒಳ್ಳೆಯ ಬೆಳವಣಿಗೆ. ಪ್ರಶ್ನೆ ಎರಡು,ಸಮಾನತೆಯ ಈ ಯುಗದಲ್ಲಿ ಮಹಿಳೆಯೊಬ್ಬರು ಅದ್ಯಕ್ಷರಾಗುವುದು ಸಾದ್ಯವೆಂದು ನಂಬುವಿರಾ?ಸಾದ್ಯವೆಂದಾದರೆ ಹೇಗೆ? ಸಮಾನತೆಯ ಈ ಯುಗದಲ್ಲಿ ಮಹಿಳೆ ಅಧ್ಯಕ್ಷೆಯಾಗುವುದು ಹೆಚ್ಚು ಸೂಕ್ತ. ಸಾಹಿತ್ಯದಂತಹ ಸೃಜನಶೀಲ ಕ್ಷೇತ್ರದಲ್ಲಿ ಮಹಿಳೆಯ ಭಾವನಾತ್ಮಕ ವ್ಯಕ್ತಿತ್ವ ಹೆಚ್ಚು ಕ್ರಿಯಾಶೀಲತೆಯನ್ನು ಪಡೆಯಬಹುದು. ಅವಳ ಹೋರಾಟದ ಮನೋಭಾವ, ಪ್ರಾಮಾಣಿಕತೆ ಕನ್ನಡ ಸಾಹಿತ್ಯ ಲೋಕದ ಸ್ತ್ರೀಯರಿಗೆ ನ್ಯಾಯ ಒದಗಿಸಬಹುದು. ಪ್ರಶ್ನೆ ಮೂರು,ಮಹಿಳೆಯೊಬ್ಬರು ಅದ್ಯಕ್ಷರಾಗದಂತೆ ತಡೆಯುವ ಶಕ್ತಿಗಳನ್ನು ಹೇಗೆ ಎದುರಿಸಬಹುದು? ಮಹಿಳೆ ಅಧ್ಯಕ್ಷೆಯಾಗದಂತೆ ತಡೆಯುವ ಸ್ವಾರ್ಥಶಕ್ತಿಗಳಿಗೆ ಮಹಿಳೆಯರ ಕೃತ್ತುತ್ವ ಶಕ್ತಿಯನ್ನು ಮನವರಿಕೆ ಮಾಡಿಕೊಡಬೇಕು. ಅವಳ ಸಾಹಿತ್ಯದ ಜ್ಞಾನ, ಸಂಘಟನಾ ಶಕ್ತಿ, ನ್ಯಾಯಪರತೆಗಳನ್ನು ಸಾಕ್ಷ್ಯಸಹಿತ ತೋರಿಸಿಕೊಡಬೇಕು. ಅದಕ್ಕಾಗಿ ಮಹಿಳೆ ತನ್ನ ಸಮಯ ಮೀಸಲಾಗಿಡಬೇಕು. ಪ್ರಶ್ನೆ ನಾಲ್ಕು, ಮಹಿಳೆಗೆ ಈ ಅದ್ಯಕ್ಷಸ್ಥಾನ ಮೀಸಲಾತಿ ರೂಪದಲ್ಲಿ ಸಿಗಬೇಕೆಂದು ಬಯಸುವಿರಾ ಇಲ್ಲ ಚುನಾವಣೆಯ ಮೂಲಕವೇ ದೊರೆಯಬೇಕೆಂದು ಬಯಸುವಿರಾ? ಮಹಿಳೆಗೆ ಅಧ್ಯಕ್ಷ ಸ್ಥಾನ ಚುನಾವಣೆಯ ಮೂಲಕ ದೊರೆಯಬೇಕು. ಮಹಿಳೆ ಸಮಾನತೆಗಾಗಿ ಕೇಳುತ್ತಿರುವಾಗ ಮೀಸಲಾತಿಯ ಭಿಕ್ಷೆ ಅವಮಾನಕರ. ನಮ್ಮ ಪ್ರತಿಭೆ ನಮ್ಮ ಗುರುತಾಗಿರುವಾಗ ಮೀಸಲಾತಿಯಂತಹ ದಯಾಭಿಕ್ಷೆ ಯಾಕೆ ಬೇಕು? ಪ್ರಶ್ನೆ ಐದು, ಈ ನಿಟ್ಟಿನಲ್ಲಿ ಮಹಿಳಾ ಅದ್ಯಕ್ಷರ ಪರ ಒಲವಿರುವ ಪುರುಷ ಮತ್ತು ಮಹಿಳೆಯರು ಯಾವ ರೀತಿಯ ಹೆಜ್ಜೆಗಳನ್ನು ಇಡಬೇಕು ಸರಿಯಾದ ವ್ಯಕ್ತಿಯನ್ನು ಹುಡುಕಿ ಪ್ರೇರಪಿಸಬೇಕು. ಅವರ ಸಾಧನೆಯ ದಾರಿಗೆ ದೀಪವಾಗಬೇಕು, ಕಣ್ಣಾಗಬೇಕು.ಸ್ವಲ್ಪ ಮಟ್ಟಿಗೆ ತ್ಯಾಗ ಹೊಂದಾಣಿಕೆಯನ್ನು ಮನೆಯವರೊಂದಿಗೆ ಮಾಡಿಕೊಳ್ಳಬೇಕು. ಸಮಾಜದಲ್ಲಿ ಜನ ಮನದ ಧ್ವನಿಯಾಗಿ ಆಗು ಹೋಗುಗಳ ಮೇಲೆ ಬೆಳಕು ತೂರಿ ಸಾಹಿತ್ಯಲೋಕದಲ್ಲಿ ನಡೆಯುತ್ತಿರುವ ಪಕ್ಷಪಾತದಂತ ಅನ್ಯಾಯಗಳ ವಿರುದ್ಧ ಸೆಣಸಾಡುವ ಶಕ್ತಿಯನ್ನು ಗುಂಪುಗಳ ಅಂದರೆ ಸಂಘ ಸಂಸ್ಥೆಗಳ ಮೂಲಕ ಸಂಬಂಧ ಪಟ್ಟವರ ಗಮನಕ್ಕೆ ತರಬೇಕು. ಸಮಾಜಸೇವೆಯಲ್ಲಿ ತೊಡಗಿರುವ ಸಾಹಿತಿ, ಲೇಖಕಿ ಅಥವಾ ನ್ಯಾಯಾಂಗದಲ್ಲಿ ಇಲ್ಲವೆ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜಪರ ಕೆಲಸಗಳಲ್ಲಿ ತೊಡಗಿರುವ ಮಹಿಳೆ ಇದಕ್ಕೆ ನ್ಯಾಯ ಒದಗಿಸಬಲ್ಲರು. ಈ ಕ್ಷೇತ್ರದ ಜನ ಅವಳನ್ನು ಅವಳ ಚಟುವಟಿಕೆ, ಬರವಣಿಗೆಗಳ ಮೂಲಕ ಗುರುತಿಸುವಂತಿರಬೇಕು. *****************************************************

ಕಸಾಪಗೆ ಮಹಿಳಾ ಅಧ್ಯಕ್ಷರು Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಸೆರೆಹಕ್ಕಿ ಹಾಡುವುದು ಏಕೆಂದು ಬಲ್ಲೆ ಇಂಗ್ಲಿಷ್ ಮೂಲ : ಮಾಯಾ ಏಂಜೆಲೋ ಕನ್ನಡಕ್ಕೆ : ಎಂ.ಆರ್.ಕಮಲ‘ಐ ನೋ ವೈ ದ ಕೇಜ್ಡ್ ಬರ್ಡ್ ಸಿಂಗ್ಸ್’ ಎಂಬ ಮೂಲ ಶೀರ್ಷಿಕೆಯನ್ನು ‘ಸೆರೆಹಕ್ಕಿ ಹಾಡುವುದು ಏಕೆಂದು ಬಲ್ಲೆ’ ಎಂಬ ಸುಂದರ ಶೀರ್ಷಿಕೆಯೊಂದಿಗೆ ಅನುವಾದಿಸಿದ್ದಾರೆ.ಇದು ಜಗತ್ಪ್ರಸಿದ್ಧ ಕಪ್ಪು ಲೇಖಕಿ ಮಾಯಾ ಎಂಜೆಲೋ ಅವರ ಆರು ಆತ್ಮಕತೆಗಳಲ್ಲಿ ಮೊದಲನೆಯದು. ಆಕೆ ತನ್ನ ಮೂರನೆಯ ವಯಸ್ಸಿನಿಂದ ಹದಿನೇಳು ವರ್ಷ ವಯಸ್ಸಿನ ವಳಾಗುವ ತನಕ ತನ್ನ ಅಣ್ಣ ಮತ್ತು ತಂದೆಯ ತಾಯಿ ಅಜ್ಜಿಯ ಜತೆಗೆ ವಾಸಿಸಿದಳು.ತಾನು ಅನುಭವಿಸಿದ್ದ ಕಷ್ಟ- ನಿಷ್ಠುರಗಳನ್ನೂ ನೋವು-ಸಂಕಟಗಳನ್ನೂ ಆಕೆ ಇಲ್ಲಿ ಎಳೆ ಎಳೆಯಾಗಿ ಬಿಡಿಸಿಟ್ಟಿದ್ದಾರೆ. ಕಪ್ಪು ಜನಾಂಗಕ್ಕೆ ಸೇರಿದ ಮಾಯಾ ಎಂಜೆಲೋ ದಕ್ಷಿಣ ಮತ್ತು ಉತ್ತರ ಅಮೆರಿಕಾಗಳಲ್ಲಿ ಬಿಳಿಯರ ವರ್ಣದ್ವೇಷ ಮತ್ತು ಅಮಾನುಷ ವರ್ತನೆಗಳನ್ನು ಮತ್ತು ಅವರಿಂದ ಶೋಷನೆಗೊಳಗಾದ ಕರಿಯರು ತಮ್ಮ ಸ್ವಾಭಿಮಾನ ಹಾಗೂ ಸ್ವಪ್ರಯತ್ನಗಳಿಂದ ಮೇಲೆ ಬರಲು ಪ್ರಯತ್ನಿಸಿದ್ದ ರ ಬಗ್ಗೆ ಬರೆಯುತ್ತಾರೆ.ಮೂರು ವರ್ಷದ ಹುಡುಗಿಯಾಗಿ ದ್ದಾಗಲೇ ತನ್ನ ನಾಲ್ಕು ವರ್ಷ ವಯಸ್ಸಿನ ಅಣ್ಣ ಬೈಲಿಯ ಜತೆಗೆ ತಾಯಿ-ತಂದೆಯರಿಂದ ಬೇರ್ಪಟ್ಟು ಆಕೆ ಅಜ್ಜಿಯ ಮನೆಯಲ್ಲಿಯೇ ಬೆಳೆಯುತ್ತಾರೆ.ಅಜ್ಜಿಯ ಧೈರ್ಯ- ಸ್ಥೈ ರ್ಯ, ಶಿಸ್ತು-ಸ್ವಾಭಿಮಾನಗಳನ್ನು ತಾನೂ ರೂಢಿಸಿಕೊಳ್ಳು ತ್ತಾಳೆ.ಇಡೀ ಹಳ್ಳಿಯಲ್ಲಿ ತನ್ನ ಸ್ವತಂತ್ರ ಮನೋಭಾವಕ್ಕೆ ಹೆಸರಾದ ಅಜ್ಜಿಯ ಬಗ್ಗೆ ಅವಳಿಗೆ ಅಪಾರ ಮೆಚ್ಚುಗೆಯಿ ದೆ.ಆದರೆ ಆಕೆಯ ಎಂಟನೇ ವಯಸ್ಸಿನಲ್ಲಿ ಒಮ್ಮೆ ಆಕೆಯ ಅಮ್ಮ ಆಕೆಯನ್ನು ತಾನು ವಾಸವಾಗಿರುವವ ಸಾನ್ ಫ್ರಾನ್ಸಿಸ್ಕೋ ನಗರಕ್ಕೆ ಕರೆತಂದು ಇಟ್ಟುಕೊಳ್ಳುತ್ತಾಳೆ. ಆದರೆ ಅಮ್ಮನ ಗೆಳೆಯನೊಬ್ಬ ಆಕೆಯ ಮೇಲೆ ಲೈಂಗಿಕ ಅತ್ಯಾಚಾರ ಮಾಡಿದಾಗ ಅವಳ ಮಾವಂದಿರು ಅವನನ್ನು ಕೊಲೆ ಮಾಡುತ್ತಾರೆ. ಈ ಎಲ್ಲ ದುರ್ಘಟನೆಗಳಿಂದ ಆಕೆ ಯ ಮನಸ್ಸಿಗೆ ಆದ ಘೋರ ಆಘಾತವು ಆಕೆಯನ್ನು ಅಕ್ಷ ರಶಃ ಮೂಕಿಯನ್ನಾಗಿಸುತ್ತದೆ. ಮುಂದಿನ ಐದು ವರ್ಷಗಳ ತನಕ ಮೂಕಿಯಾಗಿಯೇ ಇದ್ದ ಆಕೆಗೆ ಮಿಸೆಸ್. ಫ್ಲವರ್ ಎಂಬ ಸ್ನೇಹಮಯಿ ಮಹಿಳೆ ಯ ಪ್ರೋತ್ಸಾಹದಿಂದ ಮಾತು ಬರುತ್ತದೆ. ಆ ಮಹಿಳೆಯ ಮೂಲಕವೇ ಮಾಯಾ ನೃತ್ಯ-ನಾಟಕ, ಶಿಕ್ಷಣ ಮೊದಲಾದ ವಿಷಯಗಳನ್ನು ಕಲಿತು ಬದುಕಿನಲ್ಲಿ ಯಶಸ್ಸು ಸಾಧಿಸು ತ್ತಾಳೆ. ಮಾತ್ರವಲ್ಲದೆ ಕಾವ್ಯಪ್ರಿಯತೆಯನ್ನೂ ರೂಢಿಸಿಕೊಂ ಡು ಕಾವ್ಯರಚನೆ ಮಾಡುತ್ತಾಳೆ.ಮಾಯಾ ಜನಾಂಗ ದ್ವೇಷ ವನ್ನು ವಿರೋಧಿಸಿ ಅನೇಕ ಕವನಗಳನ್ನು ಬರೆಯುತ್ತಾಳೆ. ತಾನು ತೀವ್ರವಾದ ಹಲ್ಲು ನೋವಿನಿಂದ ಬಳಲುತ್ತಿರುವಾ ಗಲೂ ಚಿಕಿತ್ಸೆ ಮಾಡಲೊಪ್ಪದ ಒಬ್ಬ ಬಿಳಿಯ ದಂತವೈದ್ಯ ನ ಕ್ರೌರ್ಯ ಮತ್ತು ಕೃತಘ್ನತೆಯನ್ನು ಆಕೆ ತನ್ನ ಆತ್ಮಕಥೆ ಯಲ್ಲಿ ದಾಖಲಿಸುತ್ತಾಳೆ. ಈ ಕೃತಿಯಲ್ಲಿ ಇದೇ ಧ್ವನಿಯನ್ನು ಹೊಂದಿದ ಅನೇಕ ಕವನಗಳೂ ಇವೆ. ಅಲ್ಲದೆ ಮಾಯಾ ಅವರ ವೈಯಕ್ತಿಕ ನಿಲುವುಗಳನ್ನು ಬಿಂಬಿಸುವ ನಾಲ್ಕು ಅರ್ಥಪೂರ್ಣ ಸಂದರ್ಶನಗಳೂ ಇವೆ. ಸಂದರ್ಶನಗಳಲ್ಲಿ ಜನಾಂಗದ್ವೇಷ ರಹಿತವಾದ ಒಂದು ಹೊಸ ಸಮಾಜದ ನಿರ್ಮಾಣಕ್ಕಾಗಿ ಕರೆಯಿದೆ. ಮೂಲತಃ ಕವಿಯಾದ ಎಂ.ಆರ್.ಕಮಲ ಅವರ ಅನುವಾದದ ಭಾಷೆ ಕಾವ್ಯಾತ್ಮಕವಾಗಿದ್ದು ಬಹಳ ಪರಿಣಾಮಕಾರಿಯಾಗಿದೆ. ******************************************* ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

ಇತರೆ, ಪ್ರಬಂಧ

ಫ್ಲೈಟ್ ತಪ್ಪಿಸಿದ ಮೆಹೆಂದಿ

ಪ್ರಬಂಧ    ಫ್ಲೈಟ್ ತಪ್ಪಿಸಿದ  ಮೆಹೆಂದಿ ಸುಮಾ ವೀಣಾ                                         ಫ್ಲೈಟ್  ರಾತ್ರಿ ಹತ್ತು ಗಂಟೆಗೆ ಅಂದುಕೊಂಡು ಬೆಳಗ್ಗೆ 6 ಗಂಟೆಗೆಎದ್ದು  ವಿದೇಶೀ ಲಲನೆಯರಿಗಿಂತ ನಾವೇನು ಕಡಿಮೆ ನಾವೂ ಹೇರ್ ಕಲರ್ ಮಾಡಿಕೊಳ್ಳೋಣ  ಎನ್ನುತ್ತಲೇ ನಾನು ನನ್ನ ತಮ್ಮನ ಹೆಂಡತಿ ಶಾಲಿನಿ ಇಬ್ಬರೂ ಮೆಹೆಂದಿ ಕಲೆಸಿ ತಲೆಗೆ ಮೆತ್ತಿಕೊಂಡೆವು.  ಫಿಲ್ಟರ್ ಕಾಫಿ ಹೀರುತ್ತಾ   ಹರಟುತ್ತಿರಬೇಕಾದರೆ ನಮ್ಮ ಮೊಬೈಲಿಗೆ ಮೆಸೇಜ್  ಮಹಾಶಯ ಬಂದು “ನನ್ನನ್ನು ಒಮ್ಮೆ ನೋಡುವಿರಾ! ನೋಡುವಿರಾ!” ಎಂದು ವಿನಂತಿಸಿಕೊಳ್ಳಲಾರಂಭಿಸಿದ. ಹಾಗೆ  ತಲೆಯನ್ನೊಮ್ಮೆ ನೇವರಿಸಿಕೊಂಡರೆ ಮೆಹೆಂದಿ ಕೈಗೆಲ್ಲಾ ತಾಗಿ ಇರಿಸು ಮುರಿಸಾಯಿತು.  ಆದರೂ ಬಿಡದೆ ಮೊಬೈಲನ್ನೊಮ್ಮೆ ತೀಡಿದೆವು. ಆ ಮೆಸೇಜ್  ಮಹಾಶಯ ನಮ್ಮನ್ನೇ ಗುರಾಯಿಸುವಂತಿದ್ದ. ಅವನನ್ನು ಓದಿದರೆ ಅವನು ನಮ್ಮ ಫಾರಿನ್ ಟೂರ್ ಕುರಿತೇ ಎಚ್ಚರ  ನೀಡಿದಂತೆ ಇತ್ತು. ಫ್ಲೈಟ್  ಬೆಳಗ್ಗೆ ಹತ್ತು ಗಂಟೆಗೇ ಎಂದಿತ್ತು.   ನಾನು ಶಾಲಿನಿ ಇಬ್ಬರೂ ತಡಬಡಾಯಿಸಿಕೊಂಡು ಕಾಫಿಮಗ್ ಅನ್ನು ಕೆಳಕ್ಕೆ  ಕುಕ್ಕರಿಸಿ  “ಇನ್ನು ಹೊರಡಲು ಹೆಚ್ಚಿಗೆ ಸಮಯವೇನು ಉಳಿದಿಲ್ಲ! ಹೊರಡೋಣ! ಹೊರಡೋಣ!” ಎಂದು ಕೈ ಸನ್ನೆ ಮಾಡಿಕೊಂಡೆವು. ಮಾತನಾಡುವುದಕ್ಕೆ ಸಮಯವಿರಲಿಲ್ಲ ರಾತ್ರಿಯೇ ಲಗೇಜ್ ಪ್ಯಾಕ್  ಮಾಡಿಕೊಂಡಿದ್ದರೆ ಬಹುಶಃ ಗಾಬರಿಯಾಗುತ್ತಿರಲಿಲ್ಲವೇನೋ…..?? “ರಾತ್ರಿ ಹತ್ತು ಗಂಟೆಗಲ್ಲವ ಫ್ಲೈಟ್” ಎಂದು ಹರಟುತ್ತಿದ್ದೆವು. ಮೆಸೇಜ್ ಮಹಾಶಯ ಎಚ್ಚರಿಸದೇ ಇರದಿದ್ದರೆ ನಾವು ಇನ್ನೂ ಹಾಗೆ ಇರುತ್ತಿದ್ದವೋ ಏನೋ??  ಏರ್ಪೋರ್ಟಿಗೆ ಟ್ಯಾಕ್ಸಿಯಲ್ಲೇ ಹೋಗೋಣ  ಎಂದು ಟ್ಯಾಕ್ಸಿಯನ್ನೂ ಬುಕ್ ಮಾಡಿ ಕರೆಸಿಕೊಂಡೆವು. ಸೂಟ್ಕೇಸ್ನಲ್ಲಿ ಬಟ್ಟೆಗಳನ್ನು , ಟ್ರಾವಲಿಂಗ್  ಬ್ಯಾಗ್ನಲ್ಲಿ ತಿಂಡಿತೀರ್ಥಗಳನ್ನು ತುರುಕಿಕೊಂಡು ಟ್ಯಾಕ್ಸಿ ಹತ್ತಿ ಹೊರಟೆವು. ಟ್ಯಾಕ್ಸಿ  ಏರ್ಪೋರ್ಟ್ ಪ್ರವೇಶಿಸಿದೊಡನೆ ದಢಕ್ಕನೆ ನಿಂತಿತು. ಸಧ್ಯ! ವಾರಕ್ಕೆ ಮೊದಲೇ ಟಿಕೇಟ್ ಪ್ರಿಂಟ್ ಅವ್ಟು, ಪಾಸ್ಪೋರ್ಟ, ವೀಸಗಳನ್ನು ಬೇರೊಂದು ಬ್ಯಾಗಿಗೆ ತುರುಕಿ ಇಟ್ಟಿದ್ದೆವು.  ಅದನ್ನೇ ಕ್ಯೂನಲ್ಲಿ ನಿಂತು ಬೀಗುತ್ತಾ ತೋರಿಸಿ “ನಮಗೆ ವಿಂಡೋ ಸೈಡ್ ಸಿಕ್ಕರೆ ಸಾಕು ವಿಂಗ್ ಹತ್ತಿರ ಬೇಡ” ಎಂದುಕೊಂಡೆವು. ಅಲ್ಲೇ ಏಕೋ ಕಸಿವಿಸಿಯಾಗಲು ಪ್ರಾರಂಭವಾಯಿತು.  ಅದಕ್ಕೆ ಕಾರಣ ಅಲ್ಲಿದ್ದವರು ಸೆಲಿಬ್ರಿಟಿಗಳನ್ನಲ್ಲ ಅಪರಾಧಿಗಳನ್ನು ಗಮನಿಸುವಂತೆ, ನೋಡುವಂತೆ, ಧಿಕ್ಕರಿಸುವಂತೆ ರೆಪ್ಪೆ ಬಡಿಯದೆ ನಮ್ಮನ್ನೇ ನೋಡುತ್ತಿದ್ದರು. ನಾನು ಶಾಲಿನಿ “ ನಾವು ಈಗಷ್ಟೆ  ಫಾರಿನ್  ಟೂರ್ ಹೊರಟಿರುವುದು.  ಇನ್ನು ಫಾರಿನ್ನವರಾಗಿಲ್ಲವಲ್ಲ “ಏಕೆ ಹೀಗೆ ನೋಡುತ್ತಾರೆ” ಅಂದುಕೊಂಡೆವು.      ಹಾಗೆ ಎರಡು ಹೆಜ್ಜೆ ಮುಂದೆ ಇಡುವಷ್ಟರಲ್ಲಿ ಯುವತಿಯೊಬ್ಬಳ ಭಾರೀ ಕನ್ನಡಕದಿಂದ  ಪ್ರೇರಿತರಾದ ನಾವು ತಂಪು ಕನ್ನಡಕವನ್ನು ಹುಡುಕಿ ಹಾಕಿಕೊಂಡವು. ತಲೆಯನ್ನೊಮ್ಮೆ ನೇವರಿಸಿಕೊಳ್ಳಬೇಕೆಂದಾಗಲೇ ನಮಗೆ ಹೊಳೆದದ್ದು ನಮ್ಮ  ತಲೆಯ ಮೆಹೆಂದಿಗೆ ಜಲಭಾಗ್ಯ ಕರುಣಿಸಿಲ್ಲವೆಂದು.  ಅಷ್ಟರಲ್ಲಾಗಲೇ ನಮ್ಮ ಕೈಗೆ ಬೋರ್ಡಿಂಗ್ ಪಾಸ್ ದೊರೆಯಿತು,. ಯಾವ ಲೌಂಜಿನಲ್ಲಿ ಕುಳಿತುಕೊಳ್ಳಬೇಕೆಂಬ ವಿವರ ಪಡೆದುಕೊಂಡೆವು. ಹಾಗೆ ಅತ್ತಿಗೆ ನಾದಿನಿಯರಿಬ್ಬರೂ  ಒಬ್ಬರ ಮುಖವನ್ನೊಮ್ಮೆ ನೋಡಿಕೊಂಡೆವು ನಗು ಬರಲಿಲ್ಲ. ನಮ್ಮ ಅವಾಂತರಕ್ಕೆ  ನಮ್ಮಿಬ್ಬರಿಗೂ ಸಿಟ್ಟು ಬರುತ್ತಿತ್ತು .ಲೌಂಜಿನಲ್ಲೊಮ್ಮೆ ನಮ್ಮ ಲಗೇಜನ್ನು ಕುಕ್ಕರಿಸಿ ವಾಶ್ ರೂಮಿಗೆ ದೌಡಿಟ್ಟೆವು  ಮೆಹೆಂದಿ ವಾಶ್ ಮಾಡಲೆಂದು.  ಎಲ್ಲರ ಕಣ್ಣು ನಮ್ಮ ಮೇಲೆಯೇ.  ಮನೆ ಅಲ್ಲವಲ್ಲ ಬೇಕಾದ ಹಾಗೆ ತಲೆತೊಳೆದುಕೊಳ್ಳಲು, ಇನ್ನು ಜನ್ಮಾಪಿ ಮೆಹೆಂದಿ ಸಹವಾಸ ಮಾಡುವುದಿಲ್ಲ ಎಂದು ಶಪಥ ಮಾಡಿ ಒಬ್ಬರ ತಲೆಯನ್ನು ಒಬ್ಬರು ಪರಸ್ಪರ ತೊಳೆದುಕೊಂಡು ತಕ್ಷಣ ಲೌಂಜಿನ ಕಡೆಗೆ ಓಡಿಬಂದೆವು . ನಮ್ಮ ಸಹಪ್ರಾಯಣಿಕರೆಲ್ಲಾ ಫ್ಲೈಟ್ ಹತ್ತಿದ್ದರು. ಸಮಯ ಹತ್ತಾಗುವ ಹಾಗಿತ್ತು  ನಮಗೆ ಮತ್ತೆ ಪ್ರಯಾಣಕ್ಕೆ ಅವಕಾಶವಿರಲಿಲ್ಲ. ಕೈಕೈ ಹಿಡಿದುಕೊಂಡು ಲಗೇಜ್ ಕಡೆ ಗಮನ  ಹರಿಸಿದೆವು ಅದೂ ಅಲ್ಲಿರಲ್ಲಿಲ್ಲ . ಫಾರಿನ್ ಪ್ರಯಣಕ್ಕೆ ವಿಘ್ನ ಬಂತು ! ಅಲ್ಲಿರುವವರೆಲ್ಲರೂ ನಮ್ಮನ್ನೇ ನೋಡುತ್ತಿದ್ದರು.  ನಮ್ಮ ಕೋಪ ನೆತ್ತಿಗೇರಿತ್ತು.  ಎಲ್ಲರನ್ನು ಸುಟ್ಟುರಿಯುವಂತೆ ನೋಡುವ ಹಾಗಾಯಿತು ಏರ್ಪೋರ್ಟ್ ಸಿಬ್ಬಂದಿಯ ಮೇಲೂ ರೇಗಾಡಲೂ ಪ್ರಾರಂಭಿಸಿದೆವು. ನೀರಿಗಿಳಿದ ಮೇಲೆ ಚಳಿಯೇನು? ಎಂಬಂತೆ ಕೈಗಳನ್ನು ಜೋರಾಗಿಯೇ ಬೀಸಿಕೊಂಡು ಕಿರುಚಾಡಲು ಪ್ರಾರಂಭಿಸಿದೆವು. ಆದರೆ ನನಗೆ ಗಂಟಲಲ್ಲಿ ಏನೋ ಹಿಡಿದ ಅನುಭವ ಆಗುತ್ತಿತ್ತು.  “ಮಮ್ಮಿ! ಮಮ್ಮಿ!  ನಾನು ಎದ್ದು ಹೊರಗೆ ಹೋಗ್ತೀನಿ ನೀವೇ ಲೈಟ್ ಆಫ್ ಮಾಡಿಕೊಳ್ಳಿ” ಎಂದು ಅಲ್ಲೇ ಇದ್ದ ಚಿನ್ನು ಎರಡೆರಡು ಬಾರಿ ಕಿರುಚಿದಾಗ ನನಗೆ ದೂರದಲ್ಲಿ ಯಾರೋ ಕರೆದಂತಾಯಿತು. ಮೂರನೆಯ ಬಾರಿ ಕಿರುಚಿದಾಗ ಎದ್ದು ಕುಳಿತೆ “ ಅಯ್ಯೋ ಫ್ಲೈಟ್ ಮಿಸ್ ಆಗಲಿಲ್ವ”, “ಫ್ಲೈಟ್ ಹೋಯ್ತು”, ಲಗೇಜ್” , ಮೆಹಂದಿ,  ಶಾಲಿನಿ…. ಮತ್ತೆ ಆ ಜಗಳ ಇತ್ಯಾದಿ ಇತ್ಯಾದಿ ನೆನಪು ಮಾಡಿಕೊಂಡು ಲೈಟ್ ನೋಡಿದ ಬಳಿಕ ನನಗೆ ಅರಿವಾಯ್ತು “ಅಯ್ಯೋ! ನಾನು ಕನಸು ಕಂಡಿದ್ದು! “ಎಂದು ಮತ್ತೆ ಮತ್ತೆ ಕನಸನ್ನು ನೆನಪು ಮಾಡಿಕೊಂಡು  ಹಾಗೆ ಮಲಗಿದ್ದೆ. ಮತ್ತೆ ಚಿನ್ನು “ವ್ಯಾನ್ ಬೇಗ ಬರುತ್ತೆ” ಎಂದು ಎಚ್ಚರಿಸಿದಳು.  ಮನಸ್ಸಿಲ್ಲದೆ ಎದ್ದು  ಕನಸಿನಲ್ಲಿ ಮಿಸ್ ಮಾಡಿಕೊಂಡ ಫ್ಲೈಟನ್ನು ನೆನಪಿಸಿಕೊಂಡು ಸ್ನಾನ ,ಪೂಜೆ ಮುಗಿಸಿ  ದೋಸೆ ಹಾಕಿ ತಿರುವಿ ಮತ್ತೆ ಬೇಯಿಸುತ್ತಾ ಹಾಟ್ ಬಾಕ್ಸ್ನೊಳಗೆ ಹಾಕುವಾಗಲೆ ಇನ್ನೂ ಹಳೆಯ ನೆನಪುಗಳು ,ಮರುಕಳಿಸುತ್ತಾ ಹೋದವು.  ಹೊಟ್ಟೆ ಹುಣ್ಣಾಗುವಂತೆ ನಗಲಾರಂಭಿಸಿದೆ. “ಯಾಕೆ? ಮಮ್ಮಿ ಒಬ್ಬರೇ ನಗುವುದು” ಎಂದು ಚಿನ್ನು ಕೇಳಿದಳು. “ಏನೋ ನೆನಪಾಯಿತು” ಅಂದೆ. “ಅದೇ ನಮ್ಮ ಸೋದರ ಮಾವ ಶ್ರೀನಿವಾಸ ತಾತ ಇದ್ರಲ್ಲ ಅವರು ನೆನಪಾದರು” ಎಂದು ಘಟನೆಯನ್ನು ಚುಟುಕಾಗಿ ಹೇಳಿದೆ.  “ನಯನನ ಮದುವೆ ಇನ್ನೆರಡು  ವಾರವಿತ್ತು ಮನೆಯಲ್ಲಿ ಎಲ್ಲರೂ ಮದುವೆ ಸಾಮಾಗ್ರಿ ಖರೀದಿಗೆಂದು ಹೋಗಿದ್ದರು, ಕಾಲಿಂಗ್ ಬೆಲ್ ಸದ್ದಾಯಿತು. ಸರಿ ಬಾಗಿಲು ತೆಗೆದರೆ ಶ್ರೀನಿವಾಸ ತಾತ ಅಲ್ಲಿದ್ದರು “ಬನ್ನಿ ಬನ್ನಿ” ಎಂದು ಅವರನ್ನು ಕೂರಿಸಿ ತಿಂಡಿಕಾಫಿ ಕೊಟ್ಟೆ ಆದರೆ ಅವರು  ತೆಗೆದುಕೊಳ್ಳುವ ಸ್ಥಿತಿಯಲ್ಲಿ  ಇರಲಿಲ್ಲ ಅವರ  ಮುಖದಲ್ಲಿ ಗಾಬರಿಯಿತ್ತು “ಮದುವೆಮುಂದಕ್ಕೆ ಹೋಯ್ತ’?   ಎಂದರು “ಇಲ್ಲ ಎಂದೆ ಮದುವೆ ನಿಂತು ಹೋಯ್ತ?”  ಎಂದರು “ಇಲ್ಲ!” ಎಂದೆ ಅಷ್ಟರಲ್ಲಿ  ಅಲ್ಲೇ ಟೇಬಲ್ ಮೇಲೆ ಇದ್ದ  ನಯನಳ ಮದುವೆ ಆಮಂತ್ರಣ ಪತ್ರಿಕೆ ನೋಡಿ ತಂತಾನೆ ನಗಲಾರಂಭಿಸಿದರು. ನನಗೆ ಗಾಬರಿ ಇದೇಕೆ ಹೀಗೆ” ಹುಷಾರಾಗೇ  ಇದ್ರಲ್ಲ ಅಂದುಕೊಂಡೆ ಸರಿ ! ನಾನು ಹೊರಡುವೆ  ಎಂದು ಎದ್ದು ನಿಂತು ಮನೆಯವರನ್ನೆಲ್ಲಾ ನಾನು ಕೇಳಿರುವುದಾಗಿ ತಿಳಿಸು ನಾನು ಇವತ್ತೆ ವರಪೂಜೆ ಅಂದುಕೊಂಡು ಬಂದೆ ಸರಿಯಾಗಿ ದಿನಾಂಕ ನೋಡಿರಲಿಲ್ಲ ಎಂದು ನಗುತ್ತಲೇ ಅವರಿಗಾದ ಮದುವೆ ದಿನಾಂಕ ಕುರಿತ ಗೊಂದಲವನ್ನು  ವಿವರಿಸಿದರು. ಪರವಾಗಿಲ್ಲ ಬಿಡಿ ಬರುವ ವಾರ  ಅತ್ತೆಯನ್ನೂ ಕರೆದುಕೊಂಡು ಬನ್ನಿ       ಎಂದೆ. ಇಲ್ಲ!  ಇಲ್ಲ! ನಾನು ಹೇಗೂ ಬಂದಿದ್ದೇನಲ್ಲಾ ಅವಳೇ ಮದುವೆಗೆ ಬರುತ್ತಾಳೆ   ಮದುವೆಗೆ ಎನ್ನುತ್ತಾ ನಗುತ್ತಲೇ ಹೊರಟರು” ಎಂದು ಹೇಳಿ ಮುಗಿಸಿಲ್ಲ. ಚಿನ್ನು ಮತ್ತೆ ಜೋರಾಗಿ ನಗಲಾರಂಭಿಸಿದಳು ಅರೆ…..!! ಅವರ್ಬಿಟ್ ಇವರ್ಬಿಟ್ ಅವರ್ಯಾರು ಅನ್ನೋಹಂಗೆ ನಿನಗೇನಾಯ್ತು? ಎಂದೆ.” ನಾನು ಮಧು ಬರ್ತಡೆ ಆದ ಮೇಲೆ ಅವರ ಮನೆಗೆ ಗಿಫ್ಟ್ ತೆಗೆದುಕೊಂಡು ಹೋಗಿದ್ದೆ ಅಲ್ವ” ಎಂದಳು. ಗಿಫ್ಟ್ ಹಿಡಿದುಕೊಂಡು ಅವರ ಮನೆ ಬಾಗಿಲು ಬಡಿದರೆ “ನಿನ್ನೆ ಕರೆದರೆ ಇವತ್ತು ಬಂದಿದ್ದೀಯ ಬಾ” ಎಂದು ಕರೆದು ಕೂರಿಸಿ ಸ್ವೀಟ್, ಕೇಕ್  ತಂದು ನನ್ನ ಮುಂದೆ  ಹಿಡಿದ. ತನ್ನ ತಪ್ಪನ್ನ ಇನ್ನೊಮ್ಮೆ ಹೇಳಲಾರದೆ ,ಮುರುಕು ಡಿಲೇಟೆಡ್ ವಿಶಸ್   ಹೇಳಿ  ಮನೆಗೆ ಬಂದೆ “  ಹೇಗ್ ಮಿಸ್ ಮಾಡಿಕೊಳ್ತಿವಿ ಅಲ್ವ? ಪರೀಕ್ಷೆ  ಟೈಮಲ್ಲಿ ಹೀಗಾದರೆ …..! ಎಂದು ಉದ್ಗಾರ  ಎಳೆದಳು.  “ ಅನುಭವವೇ ಗುರು ಅಂತ ಅದಕ್ಕೆ ಹೇಳೋದು” ಎಂದು ನಾನು ಹೇಳಿದೆ. ಇನ್ನು  ಮುಂದೆ ಯಾವುದೇ ಪರೀಕ್ಷೆ, ಪೂಜೆ, ವೃತ ಫಂಕ್ಷನ್ಗಳೇ ಇರಲಿ ಪಂಕ್ಚುವಲ್ ಆಗಿ ಹೋಗಬೇಕು, ಮೊಬೈಲ್ನಲ್ಲಿ  ಅಲರಾಂ ಸೆಟ್ ಮಾಡಿ ಆದರೂ ಸರಿ,  ಕ್ಯಾಲೆಂಡರ್ ನಲ್ಲಿ  ಗುರುತು ಮಾಡಿಯಾರೂ ಸರಿ, ವಾರ್ಡ್ರೋಬ್ಗಳ ಮೇಲೆ ಚೀಟಿ ಅಂಟಿಸದರೂ ಸರಿ” ಎಂದೆ  ಅದಕ್ಕೆ ಅವಳು” ಕ್ಯಾಲೆಂಡರಿನಲ್ಲೂ ಸರಿಯಾಗಿ ಬರೆಯಬೇಕು ಸೆಪ್ಟೆಂಬರ್ನಲ್ಲಿ ಹೋಗಬೇಕಾದ ಕಾರ್ಯಕ್ರಮದ  ವಿವರವನ್ನು ಅಕ್ಟೋಬರ್ನಲ್ಲಿ ಬರೆಯಬಾರದಷ್ಟೇ” ಎಂದಳು. ಇಬ್ಬರೂ ನಕ್ಕೆವು ಗಡಿಯಾರ ನೋಡಿದರೆ ಸ್ವಲ್ಪ ಹೆಚ್ಚೇ ಮುಂದೇ ಓಡಿದಂತಿತ್ತು. ನೆನಪಿನ ಮಡಿಕೆಗಳನ್ನು  ತೆರೆಯಲು ಈಗ ಸಮಯವಿಲ್ಲ ಎಂದು ಹೇಳುತ್ತಾ ನೆನಪಿನ ಬುತ್ತಿಯನ್ನು, ಚಿನ್ನುವಿಗೆ ಮದ್ಯಾಹ್ನಕ್ಕೆ ಬೇಕಾದ  ಬುತ್ತಿಯನ್ನು ಮುಚ್ಚಿ ಯಥಾಪ್ರಕಾರ ನಿತ್ಯದ ಕೆಲಸಗಳಲ್ಲಿ ನಿರತಳಾದೆ. ಆದರೆ ಕಂಡ ಕನಸು, ಫಾರಿನ್  ಹೋಗುವ ಆತುರದ ಕನಸು ಮತ್ತೆ ಮತ್ತೆ ನನ್ನನ್ನು ಪ್ರಶ್ನಿಸುತ್ತದೆ.  ಯಾವಾಗ   ಇನ್ನೊಮ್ಮೆ ಫ್ಲೈಟ್ ಹತ್ತುವುದು ಎಂದು? **************************************   

ಫ್ಲೈಟ್ ತಪ್ಪಿಸಿದ ಮೆಹೆಂದಿ Read Post »

ಕಾವ್ಯಯಾನ

ದಿಟ್ಟ ಹೆಜ್ಜೆ

ಕವಿತೆ ದಿಟ್ಟ ಹೆಜ್ಜೆ ಶಿವಲೀಲಾ ಹುಣಸಗಿ ಇನ್ನೇನು ಬೀದಿಗೆ ಬಿದ್ದಂತೆಒಣಹುಲ್ಲಿಗೂ ಆಸರೆಯಿಲ್ಲದೇಕೊನೆಗಳಿಗೆಯ ನಿಟ್ಟುಸಿರಿಗೆನಿತ್ರಾಣದ ನಡುವಿಂದ ನಡುಕಕಣ್ಸನ್ನೆಯಲಿ ನುಡಿದುದೆಲ್ಲ ದಿಟಹೊತ್ತಿಗೆ ಬಾರದ ತುತ್ತ ನೆನೆದುಕತ್ತು ಹೊರಳಿದರೂ ನಿಲ್ಲದ ಆಪತ್ತುತೂಗುಗತ್ತಿಯ ನೆತ್ತಿಯಲಿ ಹೊತ್ತುಸ್ವಪ್ನ ಕಾಣುವ ಭರದಲ್ಲಿಯೇಸೂರಿಲ್ಲದೆ ತಾರೆಗಳಾದರೆಷ್ಟೋಒಣಹುಲ್ಲಿಗೆ ಮಣಲೆಕ್ಕ ಬರೆದುಹೊಟ್ಟೆ ಬಗಿದರೂ ಚಿಮ್ಮದಾ ನೆತ್ತರುಹಸಿವಿನ ಮುಂದೆ ಎಲ್ಲ ಸೋತವರುಶೂನ್ಯದಾಹುತಿಗೆ ಕೊರಳೊಡ್ಡಿಹರುಬೀದಿಗೆ ಬಂದ ಬದುಕಿಗೆಲ್ಲಿದೆ ತ್ರಾಣಇರಳೊಂದು ಮಸಿ ಚಲ್ಲಿದಂತೆಗಾಢಂಧಕಾರದಲಿ ಸುಖವೆಲ್ಲ ವ್ಯರ್ಥಎಲುಬಿನ ಎಣಿಕೆಯೋ ಗೋರ ಅನರ್ಥಬಯಲಿಗೆ ಬೆತ್ತಲಾಗುವ ಭಯವಿಲ್ಲನಮಗೋ ಬಯಲಾಗದೇ ಬದುಕಿಲ್ಲಬೀದಿ ಚಂದ್ರಮನೇ ಮೌನವಾಗಿಹನುಚಿಗುರೊಡೆಯದೆ ಕಮರಿದ ಬಾಳಿಗೆ.ಎದೆಸೆಟಿಸಿ ನಡೆದೆನೆಂದರೂ ನಿರಾಶೆಎದೆಬಗಿದು ಕರುಳ ಹೊಸೆಯುತಲಿನೆತ್ತರ ದೀಪ ಹಚ್ಚಿ ನಗುವವರ ನಡುವೆಬೀದಿ ದೀಪಗಳೇ ಹಿತವನಿಸಿ ಬಿಟ್ಟಿದೆದಿಕ್ಕರಿಸಿದವರ ಹುಟ್ಟಡಗಿಸಿ ನಕ್ಕರೆಬದುಕಿಗೆಲ್ಲಿದೆ ಭದ್ರತೆಯ ಹಸ್ತಸೋತ ಮನಕೆ ಆಗಸದ ಅಭಯನೆಚ್ಚಿಕೆಯ ಹಂಗಿಲ್ಲದಾ ಆರ್ಭಟವುಸ್ವಾಭಿಮಾನದ ಕಿಡಿಯ ಒಳಕಿಚ್ಚಿಗೆಭಸ್ಮವಾಗಿ ಬೀದಿಗೆ ಬಂದಾಗಿದೆಅಳಿವು,ಉಳಿವಿನ ಹೊರಾಟಕೆರಟ್ಟೆಯ ಕಸುವು ಕೊಸರುವ ಮುನ್ನದಿಟ್ಟ ಹೆಜ್ಜೆಯಿಟ್ಟು ಬದುಕಬೇಕಿದೆ.ಇಲ್ಲವಾದರೆ ಬೀದಿ ಹೆಣವಾದಂತೆ… ***********************

ದಿಟ್ಟ ಹೆಜ್ಜೆ Read Post »

You cannot copy content of this page

Scroll to Top