ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕವಚದಲ್ಲಿ ಭದ್ರ

ಕವಿತೆ ಕವಚದಲ್ಲಿ ಭದ್ರ ತಮ್ಮಣ್ಣ ಬೀಗಾರ ಕವಚದಲ್ಲಿ ಭದ್ರ…ಅದು ಯಾವಾಗ ಹೋಗುತ್ತದೆಅಥವಾ ಹೋಗುವುದಿಲ್ಲವೆಂದುಹೇಳುವುದು ಹೇಗೆ…ನನಗಂತೂ ಬಂದಿದೆ ಕಾಯಿಲೆಮರದ ಬೇರು ಕೊಳೆಯುವಷ್ಟುಮಳೆಯಾದರೆ ಚಿಗುರುವುದು ಯಾವಾಗ…ತಲೆಯ ತುಂಬಾ ಕೆಲಸ ತುಂಬಿಕೊಂಡಿದೆಕಿಸೆ ಖಾಲಿಯಾಗಿ ಕೈಗಳನ್ನು ಜೇಡರ ಬಲೆಕಟ್ಟಿ ಹಾಕಿದೆ…ಒಂದು ದಿನ ರಜೆ ಸಿಕ್ಕಿದರೆ ನನ್ನೊಂದಿಗಾಡುತ್ತಿದ್ದಕಂದ… ದಿನವೂ ನನ್ನೊಂದಿಗೆಕುಸ್ತಿ ಹಿಡಿಯುತ್ತಾನೆ ತಲೆ ಕೆಡಿಸುತ್ತಾನೆಅಲ್ಲಿ ಬಸ್ ನಲ್ಲಿ ಜನರಿಲ್ಲ ಅಂಗಡಿಯಲ್ಲಿಜನರಿಲ್ಲ ಹೊಟೆಲಿನಲ್ಲಿ ಜನರಿಲ್ಲಆದರೂ ಕಾಯ್ದುಕೊಂಡಿಲ್ಲ ಅಂತರರೋಗ ಹರಡುತ್ತಲೇ ಇದೆಇವಳು ಯುಟ್ಯೂಬ್ ನೋಡಿ ಮಾಡುವಹೊಸ ತಿಂಡಿ ರುಚಿಯಾಗುವುದಿಲ್ಲಮತ್ತೆ ಕಂಪನಿಯಿಂದ ಬರುವ ಮೇಲ ಎಷ್ಟುನಿಧಾನವೆಂದರೆ ನಡೆದು ಬರುವಪೋಷ್ಟಮ್ಯಾನ ಗಿಂತಲೂ ಹಿಂದೆಊರ ತುಂಬೆಲ್ಲ ಜನರಿದ್ದಾರೆಎಲ್ಲರಿಗೂ ಈಗ ಬಾಯಿಗೆ ಮಾಸ್ಕ ಕಟ್ಟಿದ್ದಾರೆಮತ್ತು ಕಣ್ಣೂ ಮಾತಾಡುತ್ತಿಲ್ಲಸಾಲದ ಕಂತು ರಸ್ತೆಯ ಹೊಂಡಮತ್ತು ಕಚೇರಿಯ ಕೆಲಸ ಹಾಗೇ ಇವೆಯಾವುದೋ ಕಾಯಿಲೆಗಳಿಗೆಲ್ಲತಡೆ ಹಾಕಿಕೊಂಡವರು…ಆರಾಮ ಇದ್ದೇವೆ ಎನ್ನುತ್ತಾರೆಎಲ್ಲರೂ ಕೋವಿಡ ಕವಚದಲ್ಲಿ ಭದ್ರಹಲವರಿಗೆ ಜೈಲು… ಕೆಲವರಿಗೆ ರಕ್ಷಣೆ… ************************************

ಕವಚದಲ್ಲಿ ಭದ್ರ Read Post »

ಕಾವ್ಯಯಾನ

ನೀವು-ನಾವು

ಕವಿತೆ ನೀವು-ನಾವು ಸಿ.ಎಚ್.ಮಧುಕುಮಾರ ಇಲ್ಲಿ ನೀವೇನು ಮಾಡುತ್ತಿದ್ದೀರಿ ಎಂದುನಿಮ್ಮನ್ನು ಕೇಳುವಂತಿಲ್ಲ;ಏಕೆಂದರೆ ನೀವು ಸಿಟ್ಟುಗೊಳ್ಳುವಿರಿ. ಇಲ್ಲಿ ನೀವೇನು ಮಾಡುತ್ತಿದ್ದೀರಿ ಎಂದುನೀವು ನಮ್ಮನ್ನು ಪದೇ ಪದೇ ಕೇಳಬಹುದುನಾವಾಗ ಶಾಂತವಾಗಿದ್ದರೆನಿಮ್ಮ ಆತ್ಮಕ್ಕೆ ಸ್ವರ್ಗಸುಖನಿಮ್ಮ ಮಾತಿಗೆ ಸಿಟ್ಟಾದರೆತಟ್ಟನೇದುರಹಂಕಾರಿಯ ಪಟ್ಟ ಹೊರಿಸುವಿರಿ. ನೀವು ಸದಾ ಮುಂದೆ ನಡೆಯಲು ಬಯಸುವಿರಿ; ಅದಕ್ಕೂ ಮೊದಲುಹಿಂದೆ ನಾವಿರುವುದ ಖಚಿತ ಪಡಿಸಿಕೊಳ್ಳುವಿರಿ.ನಿಮ್ಮೊಂದಿಗೆ ಹೆಜ್ಜೆ ಹಾಕುವ ಬಯಕೆಯಿದೆ,ಅದು ಯಾವತ್ತೂ ಈಡೇರದ ಬಯಕೆಯೆಂದು ತಾವು ಆಗಾಗ್ಗೆ ಧೃಢಪಡಿಸಿರುವಿರಿಆದರೂ ಪಟ್ಟು ಬಿಡದೆ ನಡೆಯುವೆವು ನಾವು! *************************************************

ನೀವು-ನಾವು Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಅಂಕಣ ಬರಹ ಜ್ಞಾನಪಾನ ಭಕ್ತಿ ಜ್ಞಾನಗಳನ್ನು ಪ್ರೇರಿಸುವ ಕೃತಿ ಕೃತಿಯ ಹೆಸರು : ಜ್ಞಾನಪಾನಪ್ರಕಾಶಕರು : ಶ್ರೀ ಅಯ್ಯಪ್ಪ ಭಕ್ತ ಸಭಾ , ಚೆನ್ನೈಪ್ರಕಟಣಾ ವರ್ಷ : ೨೦೨೦ಪುಟಗಳು : ೩೨ ಹದಿನಾರನೆಯ ಶತಮಾನದಲ್ಲಿ ಭಾರತದಾದ್ಯಂತ ನಡೆದ ಭಕ್ತಿ ಚಳುವಳಿಯ ಸಂದರ್ಭದಲ್ಲಿ ಮಲೆಯಾಳ ಭಕ್ತಿ ಕಾವ್ಯ ರಚನೆ ಮಾಡಿದವರಲ್ಲಿ ಪ್ರಮುಖರು ಪೂಂದಾನಂ ನಂಬೂದಿರಿ. ಕನ್ನಡದಲ್ಲಿ ರಚನೆಯಾದ ದಾಸ ಸಾಹಿತ್ಯದಷ್ಟು ವ್ಯಾಪಕವಾದ ವಸ್ತು ವೈವಿಧ್ಯಗಳಿಲ್ಲದಿದ್ದರೂ ಮಲೆಯಾಳದಲ್ಲಿ ಪೂಂದಾನಂ, ಚೆರುಶ್ಶೇರಿ ನಂಬೂದಿರಿ, ತುಂಜತ್ತ್ ಎಳುತ್ತಚ್ಛನ್, ನಾರಾಯಣ ಭಟ್ಟಾತಿರಿಪ್ಪಾಡ್ ಮೊದಲಾದ ಭಕ್ತಿ ಕವಿಗಳು ಬಹಳಷ್ಟು ಜೀವನಮೌಲ್ಯಗಳುಳ್ಳ ದೈವಭಕ್ತಿ ಪ್ರೇರಕ ಕಾವ್ಯವನ್ನು ರಚಿಸಿದ್ದಾರೆ.   ‘ಜ್ಞಾನಪಾನ'(ಪಾನ ಅಂದರೆ ಮಣ್ಣಿನಿಂದ ಮಾಡಿದ ಒಂದು ಅಲತೆಯ ಪಾತ್ರ) ಗುರುವಾಯೂರಪ್ಪನನ್ನು ಸಂಬೋಧಿಸಿ ಬರೆದ ಭಕ್ತಿ ಕಾವ್ಯ. ಮಹಾಕೃಷ್ಣ ಭಕ್ತರಾದ ಪೂಂದಾನಂ ತಮ್ಮ ಎಳೆಯ ಮಗುವಿನ ಅಕಾಲ ಮರಣದ ಸಹಿಸಲಾರದ  ದುಃಖವನ್ನು  ಈ ಕಾವ್ಯದ ಮೂಲಕ ಯೋಗವಿಶೇಷವಾಗಿ ಪರಿವರ್ತಿಸುತ್ತಾರೆ. ಮಲೆಯಾಳದ ಭಗವದ್ಗೀತೆಯೆಂದೇ ಪ್ರಾಮುಖ್ಯ ಪಡೆದ ಈ ಕಾವ್ಯದಲ್ಲಿ ಪಾನ ಎಂಬ ಹೆಸರಿನ ಛಂದಸ್ಸಿನಲ್ಲಿ ಬರೆದ ೩೬೫  ಸಾಲುಗಳಿವೆ. ಇದು ಒಂದು ದಾರ್ಶನಿಕ ಕಾವ್ಯ. ತನ್ನ ಸಾಹಿತ್ಯಕ ಗುಣ, ಸರಳ ಪದಪುಂಜಗಳು, ತಾತ್ವಿಕ ಶಕ್ತಿ ಹಾಗೂ ಆಳವಾದ ಭಕ್ತಿಯ ಗುಣಗಳನ್ನೂ ಈ ಕಾವ್ಯದಲ್ಲಿ ನಾವು ಕಾಣಬಹುದು. ಉದ್ದಕ್ಕೂ ವಿರುದ್ಧ ಪ್ರತಿಮೆಗಳನ್ನು ಬಳಸುವ ಮೂಲಕ ಕೃಷ್ಣನ  ಬ್ರಹ್ಮಾಂಡ   ಕೃತ್ಯಗಳನ್ನು ವ್ಯಯ ಕರ್ಮಜಾಲದಿಂದ ಮೇಲೆತ್ತುವ ಕೆಲಸವನ್ನು ಇಲ್ಲಿ ಕವಿ ಮಾಡಿದ್ದಾರೆ. ಕವಿ ತನ್ನ ದುಃಖಾನುಭವವನ್ನು ಭಕ್ತಿಸೌಧದ ನಿರ್ಮಾಣಕ್ಕಾಗಿ ಬಳಸಿ ಎಲ್ಲರಿಗಾಗಿ ಅದನ್ನು ಸದಾಕಾಲವೂ ತೆರೆದಿಟ್ಟಿದ್ದಾರೆ. ಉಣ್ಣಿಕೃಷ್ಣನ್ ಮನಸ್ಸಿಲ್ ಕಳಿಕ್ಕುಂಬೋಳ್ ಉಣ್ಣಿಗಳ್ ಮಟ್ಟು ವೇಣಮೋ ಮಕ್ಕಳಾಯ್’ (  ಬಾಲ ಕೃಷ್ಣನು ಮನದಿ ಆಟವಾಡುತ್ತಿರಲು/ ಎಳೆಯ ಮಕ್ಕಳು ನಮಗೆ ಬೇರೆ ಬೇಕೆ? (ಪುಟ ೨೬)ಎನ್ನುವ ಸಾಲುಗಳು ಕವಿಯ ದುಖದ ಅಗಾಧತೆಯನ್ನೂ ದೃಢವಾದ ಕೃಷ್ಣಭಕ್ತಿಯನ್ನೂ ಪ್ರಕಟಿಸುತ್ತವೆ. ಈ ಭರತಖಂಡದ ಪುಣ್ಯ ಭೂಮಿಯಲ್ಲಿ ಜನ್ಮತಳೆದ  ನಾವು ಪುಣ್ಯವಂತರೆಂದೂ ಈ ಜನ್ಮವನ್ನು ನಾವು ಸತ್ಕಾರ್ಯಗಳಿಗಾಗಿ ವಿನಿಯೋಗಿಸ ಬೇಕೆಂದೂ ಪೂಂದಾನಂ ಇಲ್ಲಿ ಹೇಳುತ್ತಾರೆ. ಕೇವಲ ಲೌಕಿಕ ಸುಖ ಭೋಗಗಳಿಗಾಗಿ ಹೆಣಗಾಡುವುದು ನಮ್ಮ ಜೀವನದ ಧ್ಯೇಯವಾಗಬಾರದು. ದೇವರ ಸಹಸ್ರನಾಮಗಳಲ್ಲಿ ಯಾವುದಾದರೊಂದನ್ನು ಆಯ್ದುಕೊಂಡು ಅಂತರಂಗದ ಭಕ್ತಿಯಿಂದ ನಿರಂತರವಾಗಿ ನಾಮಸ್ಮರಣೆ ಮಾಡುತ್ತ ಮೋಕ್ಷಪ್ರಾಪ್ತಿಗಾಗಿ ಪ್ರಯತ್ನಿಸುವುದೇ ನಮ್ಮ ಏಕಧ್ಯೇಯವಾಗಿರಬೆಕು ಎಂದೂ ಹೇಳುತ್ತಾರೆ.    ‘ಜ್ಞಾನಪಾನ’ ಕೃತಿಯ ಭಾಷಾ ಸರಳವಾಗಿದ್ದರೂ ಅದು ಶ್ರಿಮದ್ಭಾಗವತ, ಭಜಗೋವಿಂದಂ,, ವಿವೇಕಚೂಡಾಮಣಿ ಮತ್ತು ನಾರಾಯಣೀಯಂ ಎಂಬ ಮಹತ್ವದ ಕೃತಿಗಳ ಎಲ್ಲ ಸತ್ವಗಳನ್ನು ಒಳಗೊಂಡಿದೆ. ಪೂಂದಾನಂ ಅನ್ನುವುದು ಕವಿಯ ಹೆಸರಲ್ಲ.ಅದು ಅವರ ಮನೆತನದ ಹೆಸರು. ‘ಪೂಂದಾನಂ ಇಲ್ಲಂ’  ಇರುವುದು  ಈಗಿನ ಮಲಪ್ಪುರಂ ಜಿಲ್ಲೆಯ ಪೆರಿಂದಲ್ಮಣ್ಣದಿಂದ ೮ ಕಿ.ಮೀ.ದೂರದಲ್ಲಿ. ಕಾಸರಗೋಡಿನಲ್ಲಿರುವ ಹಿರಿಯ ಅನುವಾದಕರಾದ ಎ.ನರಸಿಂಹ ಭಟ್ ಕನ್ನಡಕ್ಕೆ ಮೂಲದ ಸೌಂದರ್ಯವನ್ನು ಮತ್ತು ಕಾವ್ಯಾತ್ಮಕತೆಯನ್ನು ಉಳಿಸಿಕೊಂಡು ಬಹಳ ಸುಂದರವಾಗಿ ಅನುವಾದಿಸಿದ್ದಾರೆ. ಉದಾಹರಣೆಯಾಗಿ ಪೂಂದಾನಂ ಅವರು ಸಮಾಜದ ವಿವಿಧ ವರ್ಗಳ ಜನರನ್ನು ಚಿತ್ರಿಸುವ ಕೆಲವು ಸಾಲುಗಳ ಅನುವಾದ : ಸ್ಥಾನಮಾನಕ್ಕಾಗಿ ಬೈದಾಡಿ ಬಡಿದಾಡಿ/  ಮಾನವೆಲ್ಲವ ಕಳೆದು ಬದುಕುವರು ಕೆಲವರು/ ಮದಮತ್ಸರಾದಿಗಳ ಮನದಲ್ಲಿ ಮುದ್ರಿಸುತ/ಮತಿಹೀನರಾಗಿ ಬದುಕುವರು ಕೆಲವೆಉ/ ಕಾಮಮೋಹಿತರಾಗಿ ಕಾಮಾಕ್ಷಿಯರ ಸೇರಿ/ಕಾಮಕೇಳಿಯಲಿ ಕಾಲ ಕಳೆಯುವರು ಕೆಲವೆರು/ದೇವಾಲಯಗಳಲ್ಲಿ ಸೇವೆಗಾಗಿಯೆ ಸೇರಿ/ ವೇಷಧಾರಿಗಳಂತೆ ಬದುಕುವರು ಕೆಲವರು..     ಓದುಗರ ಅನುಕೂಲಕ್ಕಾಗಿ ಅನುವಾದಕರು ಮೂಲ ಕೃತಿಯ ಸಾಲುಗಳನ್ನು ಬಲ ಬದಿಯ ಪುಟಗಳಲ್ಲೂ ಅನುವಾದವನ್ನು ಎಡಬದಿಯ ಪುಟಗಳಲ್ಲೂ ನೀಡಿದ್ದಾರೆ. *********************************************** ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

ಕಾವ್ಯಯಾನ

ಮೊಬೈಲಾಯಣ

ಕವಿತೆ ಮೊಬೈಲಾಯಣ ಪೂರ್ಣಿಮಾ ಸುರೇಶ್ ಹಳೆಯದು,ಉಪಯೋಗಕ್ಕೆ ಬಾರದು ಎಂದು ಸರಿಸಿಟ್ಟಮೂಲೆ ಸೇರಿದ ಮೊಬೈಲ್ಇಂದು ಅಚಾನಕ್ ಸಿಕ್ಕಿದೆ ಗಾತ್ರದಲ್ಲಿ ಚಿಕ್ಕದುಅಡ್ಡಡ್ಡ ತರಚಿದ ಕವಚಪರದೆ ದೃಷ್ಟಿ ಮಂದಇದರ ಮಿದುಳಲ್ಲಿ ನಾನು ಎಷ್ಟೊಂದು ಭಾವರಸ, ಚಿತ್ರಪಟಕಸವನ್ನೂ ತುಂಬಿಟ್ಟಿದ್ದೆಬೇಕಾದಾಗ ನೆರವಾಗುವುದೆಂದು ನಂಬಿದ್ದೆ ಕುತೂಹಲ ಆಶ್ಚರ್ಯಕರಹಿಡಿಯಲ್ಲಿ ಬ್ರಹ್ಮಾಂಡಧರ ಅಳಿಸದ ಮಾತು ತಳದಲ್ಲಿ ಉಳಿದಿರಬಹುದೇನನ್ನೊಡನೆ ಅನುಸಂಧಾನ ನಡೆಸಬಹುದೇಬಿಚ್ಚದೆ ರೆಕ್ಕೆ ತೆಪ್ಪಗಿದೆಚಾರ್ಜರ್ ಗೆ ಸಿಕ್ಕಿಸಿದೆಧ್ಯಾನಬಿಂದು ಮಿನುಗುವಂತೆಆಹಾ! ಕೆಂಪು ಚುಕ್ಕಿ ಅತ್ತ ಸರಿದು ದಿಟ್ಟಿಸಿದೆಈಡಾಗಿ ಸೂಕ್ಷ್ಮ ಸೆಳೆತಕ್ಕೆ ಈಗ ತನ್ನನ್ನು ತಾನೇತೆರೆದುಕೊಂಡಿತು ಕ್ಷಣಾರ್ಧದಲ್ಲಿನನ್ನ ಮೊಗದಲ್ಲಿ ಮುಗುಳ್ನಗೆಯ ಚೆಲ್ಲಿ- ಜಾತ್ರೆಯಲ್ಲಿ ಕಳೆದುಹೋದಹಸುಳೆ ಸಿಕ್ಕಂತೆಆಪ್ತತೆಯಿಂದ ಅಪ್ಪಿ,ಕೆನ್ನೆ ಸವರಿ ಸಂಭಾಷಿಸಿದೆಮುಗುಳ್ನಗು,ಅರೆನಗು, ಚೂರುಮಾತುಹಳಹಳಿಕೆ ಪ್ರಶ್ನೆಗಳ ಖಜಾನೆ;ಸ್ವಲ್ಪ ಹಾಡಿ ಬಿಟ್ಟ ಹಾಡು,ಕಾವ್ಯ ಆಗದ ಪದಗಳ ತಂಡ,ಕಥೆ, ಚುಟುಕು,ಲಹರಿಪೆಚ್ಚುಮುಖ, ವಿಜಯದ ನಿಶಾನೆರವಾನೆಯಾದ ದಾಖಲೆ ಕಳಚಿ ಬಿದ್ದ ಕ್ಷಣಗಳುಪರಾಗಸ್ಪರ್ಶ ನಡೆಸಿವೆಮೌನದ ಮೊಗ್ಗಿಗೆ ಸುಗಂಧವನು ಕೂಡಿಸಿದೆ ನೀನೆಂಬ ಕಳಚಿಹೋದ ನಾನುಕಳಚಲಾಗದಂತೆಎದುರಾದೆವು ನುಡಿಯಲಾಗದೆಪರಿಸ್ಥಿತಿಗೆ ತುಡಿಯಲಾಗದೆ ಈಗ ಗುಂಗಿನ ಸುರಿಮಳೆಎಲ್ಲೆಲ್ಲೂ ಹೊಮ್ಮಿದಂತೆ ಜೀವಸೆಲೆಎದೆ ಒದ್ದೆಹರವಾಗಿ ಉತ್ತ ಗದ್ದೆಕವನ ಪಲ್ಲವಿಸಿಪರಿಮಳಿಸಿದ ಮುಹೂರ್ತ; ಬದುಕಿಗೆ ದೊರಕಿದಂತೆ ಅರ್ಥ ********************************************************************************************************

ಮೊಬೈಲಾಯಣ Read Post »

ಕಾವ್ಯಯಾನ

ನೋವಮೌನ-ಅನಾಥನಲಿವು

ಕವಿತೆ ನೋವಮೌನ-ಅನಾಥನಲಿವು ಮಮತ ಅರಸೀಕೆರೆ ಸುಡುವ ಆಲೋಚನೆಗಳ ಹೊರೆಭಾರದಲ್ಲಿ ಮಗ್ಗುಲು ಬದಲಾಯಿಸಿದ ಅವಳ ನಿಟ್ಟುಸಿರು ಅತ್ಯಾಚಾರದ ಕನಸು ಕಂಡು ದಡಕ್ಕನೆ ಎಚ್ಚರಗೊಂಡ ಬೆಲೆವೆಣ್ಣ ಸಾಂದ್ರಗೊಂಡ ನಿರಾಳತೆ ಗದರಿಕೆಗೆ ಬೆದರಿ ಕೈಮುಷ್ಟಿ ಹಿಡಿದು ಸ್ಥಂಭೀಭೂತವಾಗಿ ನಿಂತ ಅಬೋಧ ಬಾಲನ ಬೆರಗು ಕಣ್ಣುಮೊಲೆಹಾಲು ಕುಡಿದು ಕಟುವಾಯಿಯಲ್ಲಿ ಇಳಿಯುವಾಗಲೇ ಅಂಗಾತವಾದ ನಿದ್ದೆಗಣ್ಣ ಬೊಮ್ಮಟೆ ನಗು ಬವಣೆಗಳನ್ನೆಲ್ಲ ಬರಹವಾಗಿಸಿದ ಅಪೂರ್ಣ ಡೈರಿಯ ಇನ್ನರ್ಧ ಖಾಲಿಪುಟಗಳ ಚಡಪಡಿಕೆಬರೆಯುತ್ತಲೇ ಅತ್ಯುತ್ಸಾಹಕ್ಕೆ ಸ್ತಬ್ಧವಾದ ಸಾಲುಗಳ ನಡುವಿನ ರೂಪಣಾತ್ಮಕ ಧ್ವನ್ಯಾರ್ಥ ಪ್ರಯಾಣದ ನಡುವೆಯೇ ತಿರುವು ರಸ್ತೆಯಲ್ಲಿ ತಟಕ್ಕನೆ ಕೆಟ್ಟು ನಿಂತ ಬದುಕ ಬಂಡಿಯ ಚಲನೆಕಕ್ಷೆಯ ತಂತು ಕಡಿದು ಆಳಕ್ಕೆ ಜಾರುವಾಗಲೇ ಖಿನ್ನ ಉಪಗ್ರಹದ ಕೈಹಿಡಿದ ಭೂಮಿ ಗುರುತ್ವ ಬತ್ತಿದ ಮೈಯ ತುಂಬ ಮರಳು ಹೊತ್ತು ಸಾಗುತ್ತಲೇ ಮರುಗಿ ತಟ್ಟಾಯಿಸುವ ನದಿಯ ಅಳಲುಧುಮುಕು ಜಲಪಾತದ ಮೆರುಗು ಕಳೆದ ಖಾಲಿಬಂಡೆಗಳ ಸವರುವ ಬಳ್ಳಿ, ಹೂಜಾಲ ನವಿರು ಯಾರೊ ಬೀಸಿದ ಕಲ್ಲು ಮತ್ತಾರಿಗೊ ತಾಗಿದಂತೆ, ಕಾಲು ಕಳೆದುಕೊಂಡು ಕುಂಟುವ ನಾಯಿ ಆರ್ತತೆಸೋಲನ್ನೇ ಕನವರಿಸಿ ಸದಾ ಸವಾರಿ ಮಾಡುವ ಜೂಜು ಕುದುರೆಯ ಮೊದಲ ಬಾರಿಯ ಗೆಲುವಿನ ಕೆನೆತ *******************************************

ನೋವಮೌನ-ಅನಾಥನಲಿವು Read Post »

ಪುಸ್ತಕ ಸಂಗಾತಿ

ಜನ್ನತ್ ಮೊಹಲ್ಲಾ

ಕಥೆಗಾರ, ಕಾದಂಬರಿಕಾರ ಅಬ್ಬಾಸ ಮೇಲಿನಮನಿಯವರು ಇವತ್ತು ನಮ್ಮನ್ನಗಲಿದ್ದಾರೆ. ಅವರ ಜನ್ನತ್ ಮೊಹಲ್ಲಾ ಎಂಬ ಕಾದಂಬರಿ ಕುರಿತು ಸುನಂದಾ ಕಡಮೆ ಬರೆದಿದ್ದಾರೆ ಜನ್ನತ್ ಮೊಹಲ್ಲಾ ಸುನಂದಾ ಕಡಮೆ ಅಬ್ಬಾಸ ಮೇಲಿನಮನಿಯವರ ಹೆಂಗರುಳು ತುಂಬಿದ ‘ಜನ್ನತ್ ಮೊಹಲ್ಲಾ’     ಎರಡು ಓದಿನ ನಂತರ ಈ ಜನ್ನತ್ ಮೊಹಲ್ಲಾದಲ್ಲಿ ಎರಡು ದಿನ ಇದ್ದು ವಿಶ್ರಮಿಸಿ ಬಂದಂತೆ ಪಾತ್ರಗಳು ಸಂಭಾಷಣೆಗಳು ಘಟನೆಗಳು ಪುನಃ ಪುನಃ ಕಾಡತೊಡಗಿದವು. ಅಚ್ಚರಿಯೆಂದರೆ ಇಲ್ಲಿಯ ಹೆಣ್ಣು ಮಕ್ಕಳಿಗೆ ಹಿಂಸೆಯೆನಿಸದ ಸ್ವಾತಂತ್ರ್ಯವಿದೆ ಮತ್ತು ಕಕ್ಕುಲಾತಿಯ ಬಂಧನಗಳಿವೆ. ನಂಬಿಕೆಗಳಿಗೆ ಕಟ್ಟುಬೀಳದೇ ಸಹಜ ಬದುಕು ನಡೆಸುವಂತೆ ಹುಮ್ಮಸ್ಸು ನೀಡುವ ವಾತಾವರಣವಿದೆ. ಹೆಣ್ಣುಮಕ್ಕಳು ಅಪೇಕ್ಷೆ ಪಟ್ಟ ಬದುಕನ್ನು ಆಯುವ ಪ್ರಜ್ಞಾನೀತಿಯಿದೆ. ಇಲ್ಲಿ ಪ್ರೀತಿ ಪ್ರೇಮ ಹಟ ರೋಷ ದ್ವೇಷ ಅಸೂಯೆ ಅನುಕಂಪ ಅಂತಃಕರಣ ಮುಂತಾದ ಮನುಷ್ಯ ಸಹಜ ಸ್ಪಂದನೆಗಳೆಲ್ಲವೂ ಬಿಡಿಬಿಡಿಯಾದ ಆಕೃತಿಯಾಗಿ ಮೇಳೈಸಿವೆ. ನಮ್ಮ ಒಟ್ಟೂ ಸಮಾಜ ವ್ಯವಸ್ಥೆಯೇ ಪುರುಷ ಪ್ರಧಾನವಾಗಿರುವದರಿಂದ, ನಮ್ಮ ಶಿಕ್ಷಣ ನೀತಿ ಶಾಸ್ತç ಕಾನೂನು ಆಡಳಿತ ಉದ್ಯೋಗ ಈ ಎಲ್ಲ ಕ್ಷೇತ್ರಗಳಲ್ಲೂ ಗಂಡಿಗೊಂದು ಹೆಣ್ಣಿಗೊಂದು ಪ್ರತ್ಯೇಕ ಮಾನದಂಡ ಏರ್ಪಟ್ಟಿರುವದು ಕೃತ್ರಿಮ ಅನ್ನುವ ಗೋಜಿಗೇ ಹೋಗುವಂತಿಲ್ಲ ಎನ್ನುವಷ್ಟರ ಮಟ್ಟಿಗೆ ನಾವೂ ಹೊಂದಾಣಿಕೆ ಮಾಡಿಕೊಂಡುಬಿಟ್ಟಿದ್ದೇವೆ. ಎಲ್ಲ ಧರ್ಮಗಳಲ್ಲೂ ಹೆಣ್ಣಿನ ಪ್ರಜ್ಞೆಯನ್ನು ಸಾವಿರಾರು ವರ್ಷಗಳಿಂದ ಒಲೆ, ಅಡಿಗೆಮನೆ, ಕಸಬರಿಗೆ, ಕನ್ನಡಿ, ಮೆಹಂದಿ ಹೀಗೆ ಹೊಸ್ತಿಲೊಳಗೇ ಕಟ್ಟಿಹಾಕಿರುವದರಿಂದ ನಮಗೆ ವಿಕಾಸ ಎಂಬುದು ಒಂದು ವಿದೇಶೀ ಪರಿಕಲ್ಪನೆ. ಸ್ತ್ರೀಯರನ್ನು ಒಂದು ವಸ್ತು ಅಥವಾ ಒಂದು ಪದಾರ್ಥದಂತೆ ಭಾವಿಸಿರುವ ಈ ವ್ಯವಸ್ಥೆ, ಹೆಣ್ಣನ್ನು ಇಂದಿಗೂ ಎರಡನೇ ನಾಗರಿಕಳಾಗಿಯೇ ನೋಡುತ್ತ ಬಂದಿದೆ. ಆದರೆ ಈ ಕೃತಿಯಲ್ಲಿ ಅಲ್ಲಲ್ಲಿ ಅವಳಿಗೆ ತುಂಬಿದ ಚೈತನ್ಯದಾಯಕವಾಗಿ ಮಿಡಿಯುವ ಜೀವ, ಲೇಖಕರ ಔದಾರ್ಯವನ್ನೂ ಮೀರಿ ಬೆಳೆದು ನಿಂತಿರುವುದು ಒಂದು ಸೋಜಿಗವೇ ಸರಿ. ಇಲ್ಲಿಯ ಹೆಂಗರುಳು ತುಂಬಿದ ಜಗತ್ತು, ನನಗೆ ಈ ಕಾದಂಬರಿ ಇಷ್ಟವಾಗಲು ಕಾರಣ.      ಕಾದಂಬರಿಕಾರ ಅಬ್ಬಾಸ್ ಮೇಲಿನಮನಿಯವರು ಅತ್ಯಂತ ಸಹಜವಾದ ಸ್ತ್ರೀಪರ ದೃಷ್ಟಿಕೋನವನ್ನು ಹೊಂದಿರುವವರಾದ್ದರಿಂದ ಈ ಮೊಹಲ್ಲಾ ಪರಂಪರೆಯ ಜಾಡ್ಯವನ್ನು ನಿವಾರಿಸಿಕೊಳ್ಳುತ್ತಲೇ ಮನುಷ್ಯತ್ವದ ಉನ್ನತಿಯನ್ನು ಇಡಿಯಾಗಿ ತನ್ನೊಡಲಲ್ಲಿಟ್ಟಿಕೊಂಡು ಸಮೃದ್ಧವಾಗಿ ಮೂಡಿ ಬಂದ ಕೃತಿ. ಹೀಗೆ ಅಮಿನೂರಿನಲ್ಲಿ ಮೈತೆತ್ತ ಪ್ರತಿಯೊಬ್ಬ ಮಹಿಳೆಯೂ ಮಾನವೀಯ ಅಂತಃಕರಣವುಳ್ಳವಳು. ವ್ಯವಸ್ಥೆಯ ಕಾರಸ್ಥಾನಕ್ಕೆ ಬಲಿಪಶುವಾಗುವ ಹೆಣ್ಣುಗಳು ತಂತಮ್ಮ ಮನೋಸ್ತೈರ್ಯದಿಂದಲೇ ಈ ಕಾದಂಬರಿಯ ಅಂತಃಸತ್ವವಾಗಿ ಬೆಳೆದು ನಿಂತಿದ್ದಾರೆ. ಕೆಲವು ಪುರುಷರ ಸಣ್ಣತನ ದುಷ್ಟತನ ಧರ್ಮಾಂಧತೆಯ ನಡುವೆಯೇ ಬೆಂದು ಬಸವಳಿದು ತಲ್ಲಣಿಸುವ ಈ ಮೊಹಲ್ಲಾದಲ್ಲಿಯ ಪ್ರತಿಯೊಬ್ಬ ಸ್ತ್ರೀ ತನ್ನ ಹೆಜ್ಜೆ ಹೆಜ್ಜೆಗೂ ಗೆಲುವಿನ ದಾರಿಯನ್ನೇ ಹಿಡಿಯುತ್ತಾಳೆ. ಇಲ್ಲಿ ಜೀವಿಸುವ ಹನ್ನೆರಡು ಪ್ರಮುಖ ಹೆಣ್ಣು ಜೀವಗಳಲ್ಲಿ ಒಬ್ಬೊಬ್ಬರದೂ ಒಂದೊಂದು ದಾರಿ. ಒಂದೊAದು ನಡೆ. ಬೇರೆ ಬೇರೆ ನೋಟ. ವಿವಿಧ ತರ್ಕಗಳು, ಪ್ರತ್ಯೇಕ ಸಂವೇದನೆಗಳು, ಎಲ್ಲ ಮನೋಭೂಮಿಕೆಗಳೂ ಸೇರಿ ಈ ನೆಲದ ನೆಮ್ಮದಿಯ ಬದುಕಿನ ಮಹತ್ತರವಾದೊಂದು ಆಕಾಂಕ್ಷೆಯೊಂದಿಗೆ ಜನ್ನತ್ ಮೊಹಲ್ಲಾ ರೂಪಿತವಾಗಿದೆಯೇನೋ ಅನಿಸುತ್ತದೆ.       ಆರಂಭದಲ್ಲಿ ನಿರಪರಾಧಿ ಮೆಹರುನ್ನಿಸಾ ತನ್ನ ಸುರುಳೀತ ದಾರಿಯಲ್ಲಿ ಅಕಾರಣ ಒದಗಿ ಬಂದ ಅನೇಕ ಸಂಧಿಗ್ಧಗಳನ್ನು ಮೆಟ್ಟಿ ನಿಲ್ಲುತ್ತಾಳೆ. ಕೊನೆಯಲ್ಲಿ ಗಂಡ ಜಾವೇದನೇ ಕ್ಷಮೆ ಕೇಳಿದರೂ ಅವನ ಮಾತನ್ನು ಧಿಕ್ಕರಿಸಿ ‘ಸ್ವಂತ ಬುದ್ಧಿ ಮತ್ತು ಮನುಷ್ಯತ್ವ ಇಲ್ಲದವನೊಂದಿಗೆ ನಾನು ಜಿಂದಗಿ ಮಾಡುವುದಿಲ್ಲ’ ಎಂದು ತಾನು ಹುಟ್ಟಿದ ಮನೆಯ ದಾರಿ ಹಿಡಿಯುವ ಮೆಹರುನ್ನೀಸಾ ವ್ಯವಸ್ಥೆಯ ತುಳಿತದಿಂದಲೇ ಸ್ವತಂತ್ರ ಬಾಳಿಗೆ ಮುನ್ನುಡಿ ಬರೆದವಳು. ಮಗುವನ್ನು ಕಳೆದುಕೊಂಡ ಸಂಕಟದಲ್ಲೂ ತನ್ನ ದಾರಿಯನ್ನು ನೇರವಾಗಿ ಗುರುತಿಸಿಕೊಂಡವಳು. ಕಷ್ಟ ಸಹಿಷ್ಣುವಾಗಿ ಬಾಳಿದ ರೆಹಮಾನನ ತಾಯಿ ಅಮೀನಾ ಕೂಡ ಇಡೀ ಬದುಕನ್ನು ಒಳ್ಳೆಯದರ ನಿರೀಕ್ಷೆಯಲ್ಲೇ ಕಳೆದವಳು. ಸಣ್ಣ ವಯದಲ್ಲೇ ಗಂಡನನ್ನು ಕಳಕೊಂಡು ಮಗ ಕೆಲಕಾಲ ದೂರವಾದಾಗ್ಯೂ ಏಕಾಂಗಿ ಜೀವಿಸಿದವಳು. ಆ ಮೂಲಕ ಇಡೀ ಸಮಾಜವನ್ನು ಕ್ಷÄಲ್ಲಕವಲ್ಲದ ರೀತಿಯಲ್ಲಿ ಮುನ್ನಡೆಸಬೇಕೆನ್ನುವವಳು. ವಿಧವೆ ತಾಹಿರಾಳನ್ನು ಸೊಸೆ ಮಾಡಿಕೊಂಡು ಸಂಪ್ರದಾಯದ ವಿರುದ್ಧವೂ ಒಂದು ಕಲ್ಲು ಎಸೆದವಳು. ಸಮಾಜ ಕೊಡಮಾಡದ ನೆಮ್ಮದಿಯನ್ನು ತನ್ನ ವೈಚಾರಿಕ ಬೆಳಕಿನಲ್ಲೇ ಪಡಕೊಂಡವಳು.       ತಂದೆಯಿಲ್ಲದ ಬಡ ಹುಡುಗ ರೆಹಮಾನನನ್ನು ತನ್ನ ಮಗನಂತೆಯೇ ನೋಡಿಕೊಂಡ, ಪ್ರಭಯ್ಯ ಹಿರೇಮಠ ಮಾಸ್ತರರ ಹೆಂಡತಿ ಮಲ್ಲಮ್ಮ,, ನಿಸ್ವಾಥದಿಂದ ಓದುಗರ ಮನಸ್ಸಿನಲ್ಲಿ ನಿಲ್ಲುತ್ತಾಳೆ. ಅನ್ಯ ಧರ್ಮೀಯ ಹುಡುಗನನ್ನು ಮನೆ ಸೇರಿಸುವ ತಾಯ ಮಮತೆಯನ್ನು ತನಗೆ ಸಿಕ್ಕ ಅವಕಾಶದಲ್ಲೇ ಸಾರ್ಥಕಪಡಿಸಿಕೊಳ್ಳಲು ಮೂಡಿ ಬಂದಂತಿರುವವಳು. ಅಮಿನೂರಿನ ಶಾಲೆಗೆ ಕನ್ನಡ ಶಿಕ್ಷಕಿಯಾಗಿ ಹೊಸ ಕದಿರು ತಂದ ಚಿಕ್ಕೋಡಿಯ ಧ್ಯಾನಸ್ಥ ಮನಸ್ಸಿನ ಹುಡುಗಿ ತಾಹಿರಾ ಪಟೇಲ್ ಸಹ ಚಿಕ್ಕ ವಯದಲ್ಲೇ ವೈಧವ್ಯದ ನೋವು ಅನುಭವಿಸಿದವಳಾದರೂ ಹೃದಯವಂತ ಸ್ವಭಾವದವಳು, ಅನಕ್ಷರಸ್ಥ ಮಹಿಳೆಯರಿಗೆ ಹೊಲಿಗೆ ಕಸೂತಿ ಕಲಿಸಿ ಪಾರತಂತ್ರದಿಂದ ನೇರ ನಿಲ್ಲಲು ಛಲ ತುಂಬಿದವಳು. ವೈಚಾರಿಕ ಪ್ರಜ್ಞೆಯ ಬೆಳಕನ್ನು ಚೆಲ್ಲುತ್ತ, ನತದೃಷ್ಟ ನಜಮಾಗೆ ಅಕ್ಷರ ಕಲಿಸುವವಳು, ಒಂದು ಕಡೆಯಿಂದ ‘ಮೊಹಲ್ಲಾದ ಹೆಂಗಸರ ತಲೆಕೆಡಿಸಿ ಪುರುಷರ ಮೇಲೆ ಎತ್ತಿಕಟ್ಟಿ ಅವಾಂತರ ಉಂಟು ಮಾಡುತ್ತಿದ್ದಾಳೆ’ ಎಂದು ತಿವಿಸಿಕೊಂಡರೂ, ಇನ್ನೊಂದು ಕಡೆಯಿಂದ ‘ಬಸವನ ಹುಳದಂಗ ತೆವಳೂದ್ರಾಗ ತೃಪ್ತಿ ಐತಿ ಹೊರತು ಹಕ್ಕಿ ಹಂಗ ಮುಗಿಲು ತುಂಬಾ ಹಾರಾಕ ಬಯಸೂದಿಲ್ಲ ಇವರು’ ಅಂತ ತನ್ನ ಜನರ ದುಗುಡ ದುಮ್ಮಾನ ಸ್ವಂತದ್ದಾಗಿಸಿಕೊಳ್ಳುವ ತಾಹಿರಾಳೇ ಈ ಕಾದಂಬರಿಯ ನಾಯಕಿಯಂತೆ ಮೇಲ್ನೋಟಕ್ಕೆ ಸೃಷ್ಟಿಯಾಗಿದ್ದಾಳೆ. ಹೆಣ್ಣುಮಕ್ಕಳ ಹತಾಷೆಯ ಬಾಳನ್ನು ಹಿಡಿದೆತ್ತಿ ಆತ್ಮಸ್ತೈರ್ಯ ತುಂಬುವದೂ ಅದರಂತೆ ಬದುಕುವುದೂ ಸಾಮಾಜಿಕ ಕಳಕಳಿಯ ಮನಸ್ಸಿಗೆ ಹಿಡಿದ ಘನತೆಯ ಕನ್ನಡಿಯಾಗಿದೆ.         ‘ಇನ್ಮೇಲೆ ನಜಮಾ ಶಾಲೀಗ ಹೊಕ್ಕಾಳ, ನಾನು ದುಡಿದು ಆಕೀಗ ಕಲಿಸ್ತೀನಿ’ ಎನ್ನುವ ನೂರಜಾನ ಕೂಡ ಕೌಟುಂಬಿಕ ವಲಯದಲ್ಲೇ ದಿಟ್ಟೆಯಾಗಿ ವರ್ತಿಸಿದವಳು. ಕುಡುಕ ಗಂಡ ಶಾಲೆ ಬಿಡಿಸಿ ಕೂಲಿಗೆ ಹಚ್ಚಿದ ಮಗಳನ್ನು, ಪುನಃ ಕೂಲಿ ಬಿಡಿಸಿ ಶಾಲೆಗೆ ಸೇರಿಸಿ ‘ಅವಳ ಕೆಲಸಾ ನಾನು ಮಾಡ್ತೀನಿ, ನನ್ನ ಕೂಸು ಓದು ಬರಹ ಕಲೀಲಿ’ ಎನ್ನುತ್ತ ತನ್ನ ಗಂಡನನ್ನೇ ಎದುರು ಹಾಕಿಕೊಂಡು ತನ್ಮೂಲಕ ಸಾಕ್ಷರದ ಮಹತ್ವವನ್ನು ಸ್ತಿçà ಸಮೂದಾಯಕ್ಕೆ ಅರುಹಿ, ಬಡವರ ಅವಶ್ಯಕತೆಗಳು ಹೆಣ್ಣುಮಗಳೊಬ್ಬಳ ಶಿಕ್ಷಣಕ್ಕೆ ಶಾಪವಲ್ಲ ಎಂಬುದನ್ನು ಕಾಣಿಸಿದವಳು. ಮುಂಬೈಗೆ ಮದುವೆಯಾಗಿ ಹೋಗಿ ಅಲ್ಪ ಕಾಲಾವಧಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ರೂಬಿಯಾ, ಪ್ರೀತಿಸಿದ ರೆಹಮಾನನನ್ನು ಅವನ ಬಡತನವೇ ಕಾರಣವಾಗಿ ಅವಳ ತಂದೆ ಎಸಗಿದ ದುರ್ವಿಧಿಯಿಂದ ಅತ್ತ ಮೆಚ್ಚಿದವನನ್ನು ಪಡೆಯಲಾರದೇ ಇತ್ತ ಅನ್ಯಾಯವನ್ನೂ ಸಹಿಸಲಾರದೇ ಜೀವ ತೆತ್ತವಳು. ರೆಹಮಾನನ ಸಖಿಯಾಗಬೇಕಾದವಳು ಸಾವಿನ ಸಖಿಯಾಗಿ ಹೋದ ದಾರುಣತೆಗೆ ಈಡಾದ ರೂಬಿಯಾ ವ್ಯವಸ್ಥೆಯ ಶೋಷಣೆಗೆ ಸಿಕ್ಕಿಹಾಕಿಕೊಂಡು ಅಸಹಾಯಕಳಾಗಿ ನಲುಗಿದಳು.       ತಸ್ಲೀಮಾ, ಗಂಡ ಅಶ್ರಫ್ ನ ಸಂಶಯಕ್ಕೆ ಎಡೆ ಮಾಡಿಕೊಡುವಂತೆ ಕುಹಕಿಗಳ ವಂಚನೆಗೆ ಬಲಿಯಾಗಿ ಕಾಲೇಜು ವಿದ್ಯೆಗೆ ತೆರೆದುಕೊಂಡವಳು. ದೂರ ಇದ್ದ ಗಂಡನನ್ನೇ ಕಾಯುತ್ತ ಚಿಂತಿಸುತ್ತ, ಅಲ್ಲಿಂದ ಹರಿದು ಬರುವ ಕೇವಲ ಹಣದ ರಾಶಿಗಾಗಿಯೋ ಎಂಬ ಸಂಶಯಕ್ಕೆಡೆ ಮಾಡುವಂತೆ ತನ್ನ ಮನಸ್ಥಿತಿಯನ್ನು ಕಿಂಚಿತ್ತೂ ಸಡಿಲಿಸದೇ ಕೂತಿದ್ದಾಗ್ಯೂ ಮನೆಯಲ್ಲೇ ಇರುವ ಕಾಮುಕನ ಹಿಂಸೆಗೆ ಒಳಗಾಗಿ ಮಾನಸಿಕವಾಗಿ ಕುಗ್ಗಿ, ಆ ಹಿನ್ನೆಲೆಯಲ್ಲೇ ಅಗ್ನಿ ಪರೀಕ್ಷೆ ಎದುರಿಸುವ ಸಧೃಡ ಮನಸ್ಸಿನವಳಾಗಿ ರೂಪಗೊಂಡವಳು. ಹೊಟೇಲ್ ಮಾಲಿಕ ಹುಸೇನ್ ಮೀಯ್ಯಾನ ಹೆಂಡತಿ ಸುರಯ್ಯಾ, ವೃದ್ಧ ಪತಿಯ ಅನಾಸಕ್ತಿಯಿಂದ ಬೇಸತ್ತು ಆತ್ಮವಂಚಿತಳಾಗಿ ಯಾವುದೋ ಕ್ಷಣದಲ್ಲಿ ರೆಹಮಾನನ ಆಸರೆ ಬಯಸಿ ಬಂದು, ನಂತರ ಪಶ್ಚಾತ್ತಾಪದಿಂದ ನೇರ ಮನಸ್ಥಿತಿಗೆ ಮರಳಿದವಳು, ರೆಹಮಾನನ ಒಡತಿಯಾದ ಇವಳು ಕೊನೆಯಲ್ಲಿ ತೆಗೆದುಕೊಳ್ಳುವ ತೀರ್ಮಾನ ಪುನಃ ತನ್ನ ಗೋಡೆ ತಾನೇ ನಿರ್ಮಿಸಿಕೊಂಡ ಹಾಗೆ ಅನಿಸುತ್ತ ಸುರಯ್ಯಾ ತನ್ನ ಮನಸ್ಸನ್ನೇ ತಾನು ಸಮಾಧಿಮಾಡಿಕೊಂಡವಳಂತೆ ಕಾದಂಬರಿಯಿAದಲೇ ದೂರವಾಗುತ್ತಾಳೆ. ರೆಹಮಾನನ್ನು ಒಂದರೆಕ್ಷಣ ಬಯಸಿದ ಅಭೀಪ್ಸೆಯೇ ಅವಳ ಅಂತರAಗದ ಬಿಡುಗಡೆಯಂತೆ ಇಲ್ಲಿ ಧ್ವನಿತವಾಗಿದೆ.       ಜಾಹೀರಾ, ಖತೀಜಾ ಬೀಬಿಯ ಮಗ ನೌಷಾದನನ್ನು ಪ್ರೇಮಿಸಿ ಮನೆ ಬಿಟ್ಟೇ ಬರುವ ಧೈರ್ಯ ತೋರಿದವಳು. ರಾತ್ರಿಯ ಕತ್ತಲನ್ನು ಸಹ ಹಿಮ್ಮೆಟಿಸಿ ಬೆಳಕಿಗೆ ಮುಖ ಮಾಡಿ ನಿಂತು ಬದುಕಿನ ಪಯಣದಲ್ಲಿ ಗಂಡಾಂತರವನ್ನೇ ಎದುರಿಸುವ ಛಾತಿಯುಳ್ಳವಳು. ಇಂಥ ಕತ್ತಲನ್ನು ಎದುರಿಸದ ರೂಬಿಯಾ ಪುನಃ ನೆನಪಾಗುತ್ತಾಳೆ. ಸೈರಾ, ಜಿಲಾನಿಯವರ ಒಳಕತ್ತಲನ್ನು ತೆರೆದು ತೋರಿದ್ದಷ್ಟೇ ಅಲ್ಲದೇ ಅವನ ನೆಚ್ಚಿನ ಹುಡುಗಿಯಾಗಿ ತನ್ನ ಒಂಟಿ ಬಾಳಿಗೆ ನಾಂದಿ ಹಾಡಲು ಹೊರಟಿರುವವಳು. ಸೈರಾಳ ಸೂಕ್ಷ್ಮಮತಿ ಬುದ್ಧಿವಂತಿಕೆ ಚಾಣಾಕ್ಷ್ಯತೆ ಧೈರ್ಯವಂತಿಕೆ ಗಮನಿಸಿದರೆ ಇವಳೇ ಈ ಕೃತಿಯ ನಿಜವಾದ ನಾಯಕಿಯಂತೆ ಮೂಡಿಬಂದಿದ್ದಾಳೆ. ಇವಳು ತಾನು ಅನುಭವಿಸಿದ ನೋವಿನ ಘರ್ಷಣೆಗಳಿಂದಲೇ ಪಾಕಗೊಂಡು ಬೆಳೆದ ಮನಸ್ಸುಳ್ಳವಳು. ಸೈರಾ ಮುಂದೊಂದು ದಿನ ತಾಹಿರಾಳಂತೆ ಜನ್ನತ್ ಮೊಹಲ್ಲಾವನ್ನಷ್ಟೇ ಅಲ್ಲ ಇಡೀ ಭೂಮಿಯನ್ನು ತಾಯಂತೆ ಪೊರೆಯುವ ಶಕ್ತಿಯುಳ್ಳವಳಂತೆ ಕಾಣುತ್ತಾಳೆ. ಕೌಸರ್ ಭಾನು, ತನ್ನ ಅನಾರೋಗ್ಯಕ್ಕೆ ಆಸ್ಪತ್ರೆಯ ವೈಜ್ಞಾನಿಕ ಔಷಧಿಯಿಂದಲೇ ಗುಣಪಡಿಸುವ ಶಕ್ತಿಯಿದೆಯೆಂದು ನಂಬಿದ್ದವಳು. ವೈಜ್ಞಾನಿಕ ದೃಷ್ಟಿಕೋನದಲ್ಲಿ ಯಾವ ಮಹಿಳೆ ಯೋಚಿಸಲು ತೊಡಗುತ್ತಾಳೋ ಅಂದಿನಿಂದಲೇ ಅವಳ ವಿಕಾಸದ ಮೆಟ್ಟಿಲುಗಳು ಆರಂಭಗೊಳ್ಳುತ್ತವೆ ಅಂದಿದ್ದರು ಲೋಹಿಯಾ. ಖತೀಜಾ ಬೀಬಿ, ಗಂಡನಿಗೆ ಒಂದು ಮಗುವನ್ನು ಹೆತ್ತುಕೊಡುವಲ್ಲಿ ಯಶಸ್ವಿಯಾಗಿ ಅವನ ಆಸ್ತಿಯಲ್ಲೇ ಸಂಸಾರ ನಡೆಸುವ ಪಯಣದಲ್ಲಿ ದಾಯಾದಿಗಳಿಂದ ಅನ್ಯಾಯವಾಗಿ ನೋವು ಅನುಭವಿಸುತ್ತಿರುವವಳು. ಖತೀಜಾ ಬೀಬಿಯ ನಂಬಿಕೆಗಳು ಕೂಡ ಅವೈಜ್ಞಾನಿಕವಾದುದಲ್ಲ. ಇದು ಸುರಯ್ಯಾಳ ಧಾರ್ಮಿಕ ನಂಬಿಕೆಗಳಿಗಿAತ ತೀವ್ರವಾದದ್ದು ಮತ್ತು ಅಷ್ಟೇ ಪ್ರಾಮಾಣಿಕವಾದದ್ದು.       ರಾಜಕೀಯ ಸ್ವಾರ್ಥ ವಂಚನೆ ತುಳಿತ ಹಿಂಸೆ ಏನೆಲ್ಲವುಗಳ ಮಧ್ಯೆಯೇ ಈ ಮೊಹಲ್ಲಾದಲ್ಲಿ ಹನ್ನೆರಡು ಸ್ತ್ರೀಪಾತ್ರಗಳು ಜೀವಂತಿಕೆಯಿಂದ ನಳನಳಿಸುತ್ತವೆ, ಸ್ತ್ರೀಯರನ್ನು ತಿಳಿವಳಿಕೆಯುಳ್ಳವರು ಸಂಸ್ಕಾರವಂತರು ಸುಸಂಸ್ಕೃತರು ಎಂಬುದನ್ನು ಒಪ್ಪಿಕೊಳ್ಳುತ್ತ ಸಾಗುವುದು ಕೂಡ ಕಾದಂಬರಿಕಾರ ಅಬ್ಬಾಸರ ದೊಡ್ಡತನವೇ ಆಗಿದೆ. ಈ ವಿಶಾಲ ಮನೋಭಾವ ಎಲ್ಲ ಲೇಖಕರಲ್ಲಿ ಇರುವುದಿಲ್ಲ. ಇಲ್ಲಿ ಹಣಕಿ ಹಾಕುವ ಮನುಷ್ಯ ಸಹಜ ಹಿಂಸೆಯಲ್ಲೇ ನಿಗೂಢವಾಗಿರುವ ಇನ್ನೊಂದು ಸ್ತರದಲ್ಲಿ ಅಹಿಂಸೆ ಮಾನವೀಯತೆಗಳು ಪ್ರತಿಬಿಂಬಿಸುತ್ತವೆ. ಮುಸ್ಲಿಂ ಸಮುದಾಯದ ನಿತ್ಯದ ಬದುಕನ್ನು ನಿರೂಪಿಸುತ್ತ ಅಬ್ಬಾಸರು ಈ ನೆಲದ ಕತೆಯನ್ನು ಆಪ್ತವಾಗಿ ಹೇಳುತ್ತಾ ಹೋಗುತ್ತಾರೆ. ಅಬ್ಬಾಸರ ದೃಷ್ಟಿಯಿರುವುದು ಸಾಮಾಜಿಕ ನ್ಯಾಯಗಳ ಬಗ್ಗೆ. ಮನುಷ್ಯ ಸಂಬಂಧಗಳನ್ನು ಸಮುದಾಯಿಕ ನೆಲೆಯಲ್ಲಿ ತಂದು ನಿಲ್ಲಿಸಿ ಪರಸ್ಪರ ಕೊಂಡಿ ಬೆಸೆಯಲು ಕಾದಂಬರಿಯುದ್ದಕ್ಕೂ ಯತ್ನಿಸುತ್ತಾರೆ.       ಪುರುಷರ ಬದುಕಿನಲ್ಲಿ ಸ್ತ್ರೀಯರ ಅಗತ್ಯವನ್ನು ಮನಗಂಡವರು ಅಬ್ಬಾಸರು. ಹಾಗೂ ಸ್ತಿçÃಯರ ದೈನಿಕಕ್ಕೆ ಇರುವ ಆತ್ಮವಿಶ್ವಾಸಗಳ ಕೊರತೆಯನ್ನು ಕಾಣಿಸುತ್ತಲೇ ಅಬ್ಬಾಸರು ಅದಕ್ಕೆ ಪರ್ಯಾಯವಾಗಿ ಕೆಲವು ಬಿಡುಗಡೆಯ ನೋಟಗಳನ್ನು ತೋರಿಸುತ್ತಾರೆ. ನೆಲದ ನೆಮ್ಮದಿಗೆಡದಂತೆ ಬದುಕು ನೀಡಬಹುದಾದ ಅನೇಕ ಎಚ್ಚರಗಳನ್ನು ಮೊಹಲ್ಲಾದ ಪಾತ್ರಗಳು ಸಾಧಿಸುತ್ತವೆ, ಮೊಹಲ್ಲಾದ ಲೋಕವು ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಗತ ಘನತೆಯನ್ನು ಎಲ್ಲೂ ಭಂಜಿಸದ ಹಾಗೆ ಕಾದುಕೊಳ್ಳುತ್ತದೆ. ಶ್ರಮಿಕ ವರ್ಗದ ಹಿತದ ದೃಷ್ಟಿಯಿಂದ ಇಲ್ಲಿಯ ಸಂದರ್ಭಗಳು ಘಟನೆಗಳು ಮೊನಚಾಗಿಯೂ ಹರಿತವಾಗಿಯೂ ಮೂಡಿ ಬಂದಿವೆ. ದುರ್ಬಲ ಮನಸ್ಥಿತಿಯ ಪ್ರಾಣಿ ಬುದ್ಧಿಯ ಬೆರಳೆಣಿಕೆಯಷ್ಟೇ ವ್ಯಕ್ತಿಗಳೂ ಹಂತಹಂತವಾಗಿ ಉನ್ನತಿಯ ಮಟ್ಟಕ್ಕೇರುವ ಸಕಾರಣ ಸನ್ನಿವೇಶಗಳ ಸರಪಳಿ ಆಪ್ಯಾಯಮಾನವಾಗಿದೆ.      ಪ್ರೇಮ, ಮದುವೆ, ಹೊಂದಾಣಿಕೆ ಇವನ್ನು ಮೀರಿದ ಲಾಕ್ಷಣಿಕ ಬದುಕು ದೊರೆತ ದಿನ, ಇಲ್ಲಿಯ ಹೆಣ್ಣು ಜೀವಗಳ ಆತಂಕಗಳು ತಲ್ಲಣಗಳು ತೋರತೊಡಗುವವು. ಬಡ ಮಧ್ಯಮ ವರ್ಗದ ಜಗತ್ತಿನ ಸಂಬಂಧಗಳ ವಿಪರೀತಗಳನ್ನು ಬೆಸೆಯಲು ಹೋಗದೇ ಅದರ ನಡುವಿನ ಅನಾಮಿಕತೆಯನ್ನು ಅದು ಇದ್ದಂತೆಯೇ ಬೆಳೆಯಲು ಬಿಟ್ಟು ನಿರೂಪಿಸಿದ ಕಾರಣದಿಂದ ಒಂದು ರೀತಿಯ ಲೋಕಾರೂಢಿಯ ದೃಶ್ಯ ವಿಸ್ತಾರ ಇಲ್ಲಿ ತಾನೇ ತಾನಾಗಿ ಒಲಿದು

ಜನ್ನತ್ ಮೊಹಲ್ಲಾ Read Post »

ವಾರದ ಕವಿತೆ

ವಾರದ ಕವಿತೆ

ಮಕ್ಕಳಹಾಡು ದೂರವಿರಲಾಗದ ಹಾಡು ಶ್ರೀದೇವಿ ಕೆರೆಮನೆ ಶಾಲೆಗೆ ಬರಲೇ ಬೇಕು ಅಂತಕರೆದರೆ ಹೋಗದೇ ಏನು ಮಾಡೋದುದೂರದೂರ ಕುಳಿತುಕೋ ಅಂದರೆಒಬ್ಬಳೇ ಹೇಗೆ ಕೂರೋದು ಅಕ್ಕಪಕ್ಕ ಗೆಳತಿಯರಿಲ್ಲ ಅಂದ್ರೆಅಕ್ಕೋರು ಹೇಳೋ ಪಾಠ ತಿಳಿಯೋದು?ಅದು ಹೇಗೆ ನಾವು ಗೆಳತಿಯರೇ ಇದ್ರೆಮಾತಾಡುವಾಗಲೂ ದೂರ ನಿಲ್ಲೋದು ಮುಖಕ್ಕೆ ಮಾಸ್ಕು ಹಾಕ್ಕೋಂಡಿದ್ರೆಗೊತ್ತಾಗಲ್ಲ ರಾಣಿ ನಗೋದುಮೂಗು ಬಾಯಿ ಮುಚ್ಕೊಂಡಿದ್ರೆಶುದ್ಧಗಾಳಿ ಹೇಗೆ ಸಿಗೋದು ಅಣ್ಣನಿಗೆ ಪರೀಕ್ಷೆಯಂತೆ ಮುಂದಿನವಾರಹೆದರಿಕೆಲ್ಲಿ ಓದಿದ್ದು ಹೇಗೆ ನೆನಪಿರೋದುಪರೀಕ್ಷೆ ಬರೆಯೋಕೆ ಭಯ ಇಲ್ಲವಂತೆಬರೋದಿಲ್ಲ ಮಾಸ್ಕು ಹಾಕಿ ಉಸಿರಾಡೋದು ಶಾಲೆಗೆ ಹೋಗು ಅಂತ ಬೈಯ್ತಿದ್ದ ಅಮ್ಮಂಗೆಬೇಡವಂತೆ ಶಾಲೆ ಶುರುವಾಗೋದುಮನೆಲಿರು ಸಾಕು ಕೇಳಿದ್ದು ಕೊಡಿಸ್ತೀನಿಅಂತಿದ್ದಾರಪ್ಪ ಈಗೇನು ಮಾಡೋದು? ಆಟ ಇಲ್ಲ, ಓಟ ಇಲ್ಲ, ಯಾವ ಖುಷಿಯೂ ಇಲ್ಲಸುಮ್ಮನೆ ಕುಳಿತುರು ಅಂದರೇನು ಮಾಡೋದುಹಾಡೂ ಬೇಡ, ಕುಣಿತವೂ ಬೇಡ ಅಂತಾರಲ್ಲ  ಆಗೋದಿಲ್ಲ ದಿನವಿಡಿ ಪಾಠ ಕೇಳೋದು ಗೆಳತಿಯರ ಮುಖ ನೋಡೋಕಾಗದೆಮೊಬೈಲ್ ಪಾಠ ಹೇಗೆ ನೋಡೋದು  ಮುಟ್ಟಿ ಚಿವುಟಿ ಮಾಡಲಾಗದೇಹೇಗೆ ಮುಸಿಮುಸಿ ನಗುವುದು? ಮುಗಿದು ಹೋಗಿ ಬಿಡಲಿ ಒಂದ್ಸಲಈ ಕರೋನಾ ಎಷ್ಟು ಕಾಡೊದುಬೇಗ ಬರಲಿ ಜೊತೆಗಿರುವ ಕಾಲಒಟ್ಟಿಗೆ ಹಾಡಿ ಕುಣಿಯೋದು   ***************************************

ವಾರದ ಕವಿತೆ Read Post »

ಅನುವಾದ

ಕಾಡಿನಲ್ಲಿ ಕಾಡಿದ ಭೂತ

ಅನುವಾದಿತ ಕಥೆ ಕಾಡಿನಲ್ಲಿ ಕಾಡಿದ ಭೂತ ಇಂಗ್ಲೀಷ್ ಮೂಲ: ಆರ್.ಕೆ.ನಾರಾಯಣ್       ಬಹಳ ವರ್ಷಗಳ ಹಿಂದೆ ನಡೆದ ಘಟನೆ. ನೀವು ನಂಬುತ್ತೀರೋ ಇಲ್ಲವೋ ನನಗೆ ಗೊತ್ತಿಲ್ಲ ಆದರೆ ಘಟನೆ ನಡೆದುದು ಮಾತ್ರ ಸತ್ಯ. ನಾನು ಆಗ ಕಾರಿನಲ್ಲಿ ಹೋಗುತ್ತಿದ್ದೆ. ಆಗ  ನನ್ನ ಕಾರಿನ ಚಾಲಕ ದಾಸಪ್ಪ ತುಂಬ ಸಭ್ಯವಾದ ವ್ಯಕ್ತಿ. ಆದರೆ ಆ ದಿನ ಅವನು ಯಾಕೆ ಹಾಗೆ ವರ್ತಿಸಿದನೋ ಗೊತ್ತಿಲ್ಲ. ಅವನು ತುಂಬಾ ಕುಡಿದಿದ್ದಿರಬಹುದು. ಏನೇ ಆಗಲಿ, ನಿಮ್ಮ ಕುತೂಹಲಕ್ಕಾಗಿ ಈ ಕಥೆಯನ್ನು ಹೇಳುತ್ತೇನೆ ಕೇಳಿ.        ಆ ದಿನ ನಾನು ಕುಂಬಳೂರಿಗೆ ಹೋಗಿ ಕೆಲಸವನ್ನು ಮುಗಿಸಿಕೊಂಡು ಬರಬೇಕಾಗಿತ್ತು. ಅದಕ್ಕಾಗಿ ಒಂದು ಕಾರನ್ನು ಬಾಡಿಗೆಗೆ ಹಿಡಿದು ಮಾಲ್ಗುಡಿಯಿಂದ ಸುಮಾರು ಐವತ್ತು ಮೈಲಿ ದೂರದಲ್ಲಿರುವ ಕುಂಬಳೂರಿಗೆ ಹೋಗಿ, ಅಲ್ಲಿ ಕೆಲಸ ಮುಗಿಸಿಕೊಂಡು ಬರುತ್ತಿದ್ದೆ. ನಾನು ಹೊರಡುವಾಗ ಸುಮಾರು 9:00 ಗಂಟೆ ರಾತ್ರಿ ಆಗಿತ್ತು. ನಾನು ಬೇಡವೆಂದರೂ ಕಾರಿನ ಚಾಲಕ ಕಾರನ್ನು ಸ್ವಲ್ಪ ವೇಗವಾಗಿಯೇ ನಡೆಸುತ್ತಿದ್ದ. ನನ್ನ ಕಾರಿನ ಚಾಲಕ ದಾಸಪ್ಪ ಸುಮಾರು 25 ವರ್ಷದ ಯುವಕ. ಆತನು ತುಂಬಾ ನಂಬಿಕಸ್ತ ಹಾಗೂ ನನಗೆ ಪ್ರಿಯವಾದ ಚಾಲಕ. ನನಗೆ ವಾಹನದ ಅವಶ್ಯಕತೆ ಇದ್ದಾಗಲೆಲ್ಲ ನಾನು ಅವನ ಕಾರನ್ನೇ ಬಾಡಿಗೆಗೆ ತೆಗೆದುಕೊಂಡು ಹೋಗುತ್ತಿದ್ದೆ. ಅವನು ನನ್ನ ಕೆಲಸ ಕಾರ್ಯಗಳಿಗೆ ತುಂಬಾ ಚೆನ್ನಾಗಿ ಹೊಂದಿಕೊಂಡಿದ್ದ. ಕೆಲವೊಮ್ಮೆ ಗಂಟೆಗಳ ಕಾಲ ನನಗಾಗಿ ಕಾಯಬೇಕಾಗಿ ಬಂದರೂ ಸ್ವಲ್ಪವೂ ತಕರಾರು ಮಾಡದೇ ಕಾಯುತ್ತಾ ಕುಳಿತಿರುತ್ತಿದ್ದ. ಕಾರನ್ನು ಕೂಡ ತುಂಬಾ ನಿಧಾನವಾಗಿ ನಡೆಸುತ್ತ ಬಾಡಿಗೆದಾರರಿಗೆ ಯಾವ ರೀತಿಯ ಮುಜುಗರವಾಗದಂತೆ ನೋಡಿಕೊಳ್ಳುತ್ತಿದ್ದ. ಹಾಗಾಗಿ ನಾನು ಯಾವಾಗಲೂ ಅವನ ಕಾರನ್ನು ಉಪಯೋಗಿಸುತ್ತಿದ್ದೆ.       ನಾವು ಆ ದಿನ ಹೊರಟು ಆ ಸ್ಥಳಕ್ಕೆ ಬಂದಾಗ ಸುಮಾರು 11 ಗಂಟೆ ರಾತ್ರಿಯಾಗಿತ್ತು.  ಕರಾಳ ಕಾರ್ಗತ್ತಲು ಆವರಿಸಿದ್ದು ಪ್ರಯಾಣ ಮಾಡುವಾಗ ಏಕೋ ಒಂದು ತರದ ಭಯ ಉಂಟಾಗುತ್ತಿತ್ತು. ಸುತ್ತಮುತ್ತಲ ಪ್ರದೇಶದಗಳಲ್ಲೆಲ್ಲ ಜನರು ನಿದ್ದೆಯಲ್ಲಿ ಮುಳುಗಿಹೋಗಿದ್ದರು. ಆಕಾಶದಲ್ಲಿ ಕಾಣಿಸುವ ಅಲ್ಲೊಂದು ಇಲ್ಲೊಂದು ನಕ್ಷತ್ರಗಳ ಬೆಳಕನ್ನು ಬಿಟ್ಟು ಇನ್ನೇನು ಕಾಣಿಸುತ್ತಿರಲಿಲ್ಲ. ಹಿಂಭಾಗದ ಸೀಟಿಗೆ ಒರಗಿ ಕುಳಿತಿದ್ದ ನನಗೆ ಕಾರು ಚಲಿಸುವ ಸಪ್ಪಳವೊಂದನ್ನು ಬಿಟ್ಟು ಇನ್ನೇನು ಕೇಳಿಸುತ್ತಿರಲಿಲ್ಲ. ಹಾಗೆಯೇ ನಿದ್ದೆಯ ಮಂಪರು ಬಂದು ನನ್ನನ್ನು ಆವರಿಸಿತ್ತು. ಇದ್ದಕ್ಕಿದ್ದಂತೆ ಬಂದ ದಾಸಪ್ಪನ ಕಿರುಚಾಟದಿಂದ ನನಗೆ ತಕ್ಷಣವೇ ಎಚ್ಚರವಾಯಿತು.       “ಹೇ ಮುದುಕ, ನಿನಗೇನು ತಲೆ ಕೆಟ್ಟಿದೆಯೇ? ಪ್ರಾಣ ಕಳೆದುಕೊಳ್ಳಬೇಕೆಂದು ತೀರ್ಮಾನಿಸಿದ್ದೀಯಾ? ಸಾಯಲು ನಿನಗೆ ಬೇರೆ ಯಾವ ಸ್ಥಳವೂ ಸಿಗಲಿಲ್ಲವೇ?” ಎನ್ನುತ್ತ ಕಾರನ್ನು ಆ ದಟ್ಟವಾದ ಕಾಡಿನ ಮಧ್ಯದಲ್ಲಿ ನಿಲ್ಲಿಸಿದ    ತಕ್ಷಣವೇ ಎಚ್ಚೆತ್ತ ನಾನು ಗಡಿಬಿಡಿಯಿಂದ, “ಏನಪ್ಪಾ ಸಮಾಚಾರ? ಕಾರನ್ನು ಏಕೆ ನಿಲ್ಲಿಸಿದೆ?” ಎಂದು ಕೇಳಿದೆ.    “ನೋಡಿ ಸರ್, ಅಲ್ಲಿ ಆ ಮುದುಕ ನನ್ನ ಕಾರಿಗೆ ಅಡ್ಡ ಬರುತ್ತಿದ್ದಾನೆ. ಅವನಿಗೆ ಜೀವ ಹೆಚ್ಚಾಗಿದೆ  ಎಂದು ಕಾಣಿಸುತ್ತದೆ. ತಾನು ಏನು ಮಾಡುತ್ತಿರುವೆ ಎಂಬ ಪ್ರಜ್ಞೆ ಇದ್ದಂತಿಲ್ಲ.” ಎನ್ನುತ್ತ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದ.     ಅವನು ಹೇಳಿದ ದಿಕ್ಕಿನಲ್ಲಿ ನಾನು ಗಮನವಿಟ್ಟು ವೀಕ್ಷಿಸಿದೆ.  ಆದರೆ ಅವನು ಹೇಳಿದಂತೆ ನನಗೆ ಯಾವ ವ್ಯಕ್ತಿಯೂ ಕಾಣಿಸಲಿಲ್ಲ. ಹಾಗಾಗಿ ನಾನು,   “ಏನಪ್ಪಾ, ನೀನು ಯಾರ ಬಗ್ಗೆ ಹೇಳುತ್ತಿದ್ದೀಯ? ಯಾರೂ ಕಾಣಿಸುತ್ತಿಲ್ಲವಲ್ಲ? ಎಂದು ಕೇಳಿದೆ.    “ನೋಡಿ ಅಲ್ಲಿ, ಅಲ್ಲಿ ಅವನು ಓಡುತ್ತಿದ್ದಾನೆ” ಎನ್ನುತ್ತ ಕಾರಿನ ಮುಂಭಾಗದ  ದಿಕ್ಕಿನಲ್ಲಿ ತೋರಿಸತೊಡಗಿದೆ     ಆದರೆ ಅವನು ಹೇಳಿದ ದಿಕ್ಕಿನಲ್ಲಿ ನನಗೆ ಏನೂ ಕಾಣಿಸಲಿಲ್ಲ. ಆದರೂ ನಾನು ಟಾರ್ಚನ್ನು ತೆಗೆದುಕೊಂಡು ಕಾರಿನಿಂದ ಕೆಳಗಿಳಿದು, ಅವನು ಹೇಳಿದ ದಿಕ್ಕಿನಲ್ಲಿ ಪರೀಕಿಸ್ಷಿದೆ. ಅವನು ಹೇಳಿದ ದಿಕ್ಕಿನಲ್ಲಿ ಒಂದು ದೇವಸ್ಥಾನ ಕಾಣಿಸುತ್ತಿತ್ತು. ಅದೊಂದು ಪಾಳು ಬಿದ್ದ ದೇವಸ್ಥಾನವಾಗಿದ್ದು ಗೋಡೆಗಳೆಲ್ಲ ಶಿಥಿಲಗೊಂಡಿದ್ದವು. ಅದರ ಹತ್ತಿರ ಯಾರೂ ಹೋಗುವಂತಿರಲಿಲ್ಲ. ಅದರ ಬಾಗಿಲು ನೋಡಿದರೆ ತೆಗೆದು ಎಷ್ಟೋ ದಿವಸಗಳಾದಂತೆ ಕಾಣಿಸುತ್ತಿತ್ತು. ನೂರಾರು ವರ್ಷಗಳಿಂದ ಅದರಲ್ಲಿ ಯಾರೂ ವಾಸವಾಗಿರುವ ಸಾಧ್ಯತೆ ಇದ್ದಂತೆ ಕಾಣಿಸುತ್ತಿರಲಿಲ್ಲ. ಹಾಗಾಗಿ ನಾನು ದಾಸಪ್ಪನ ಕಡೆಗೆ ತಿರುಗಿ,   “ದಾಸಪ್ಪ, ಅದೊಂದು ಪಾಳು ಬಿದ್ದ ದೇವಸ್ಥಾನ. ಅದರಲ್ಲಿ ಯಾರೂ ಇದ್ದಂತೆ ಕಾಣಿಸುವುದಿಲ”್ಲ   “ಇಲ್ಲ ಸರ್, ಒಬ್ಬ ಮುದುಕ ಅಲ್ಲಿಂದ ಈಗ ತಾನೇ ಬಾಗಿಲು ತೆಗೆದುಕೊಂಡು ಬಂದಿದ್ದಾನೆ. ನೋಡಿ, ನೋಡಿ, ಅಲ್ಲೇ ನಿಂತಿದ್ದಾನೆ. ಬೇಕಾದರೆ ಅವನ ಬಳಿ ದೇವಸ್ಥಾನದ ಬಾಗಿಲನ್ನು ತೆಗೆಯಲು ಹೇಳಿ ನೋಡೋಣ”   ಒಂದಕ್ಕೊಂದು ಸಂಬಂಧವಿಲ್ಲದ ಅವನ ಉತ್ತರವನ್ನು ಕೇಳಿ ನನಗೆ ಬೇಸರವಾಯಿತು.    “ದಾಸಪ್ಪ, ತುಂಬಾ ಹೊತ್ತಾಯಿತು, ನಡಿ ಹೋಗೋಣ” ಎಂದೆ.    ನಾವಿಬ್ಬರೂ ವಿಷಯವನ್ನು ಅಲ್ಲಿಗೇ ಬಿಟ್ಟು ಕಾರನ್ನು ಹತ್ತಿ ಕುಳಿತುಕೊಂಡೆವು.. ಆತನು ತನ್ನ ಕೀಯನ್ನು ತೆಗೆದುಕೊಂಡು ಕಾರನ್ನು ಸ್ಟಾರ್ಟ್ ಮಾಡತೊಡಗಿದ.    “ಸಾರ್, ಈ ವ್ಯಕ್ತಿ ನಮ್ಮ ಜೊತೆಗೆ ಕಾರಿನಲ್ಲಿ ಸ್ವಲ್ಪ ದೂರ ಬರುವನಂತೆ. ಇಲ್ಲೇ ಮುಂದಿನ ತಿರುವಿನಲ್ಲಿ ಇಳಿದುಕೊಳ್ಳುವನಂತೆ . ಅವನನ್ನು ಕರೆದುಕೊಂಡು ಹೋಗೋಣವೇ?” ಎಂದು ಕೇಳಿದ   “ನೀನು ಯಾರ ಬಗ್ಗೆ ಹೇಳ್ತಿದ್ದೀಯಾ?’ ನಾನು ಆಶ್ಚರ್ಯದಿಂದ ಕೇಳಿದೆ.    “ಇಲ್ಲೇ ಕುಳಿತಿದ್ದಾನಲ್ಲ ಅಜ್ಜ, ಇವನ ಬಗ್ಗೆಯೇ ನಾನು ಹೇಳುತ್ತಿರುವುದು” ಎನ್ನುತ್ತ ದಾಸಪ್ಪ ತನ್ನ ಸೀಟಿನ  ಎಡಭಾಗದ ಜಾಗವನ್ನು ತೋರಿಸಿದ.    “ದಾಸಪ್ಪ ನಿನಗೇನಾಗಿದೆ? ಈ ದಿನ ಏನಾದರೂ ಸ್ವಲ್ಪ ಹೆಚ್ಚಾಗಿ ಕುಡಿದಿದ್ದೀಯಾ?”    “ಕ್ಷಮಿಸಿ ಸರ್, ನಾನು ಇಡೀ ಜೀವಮಾನದಲ್ಲಿ ಒಂದೇ ಒಂದು ಹನಿ ಮಾದಕ ದ್ರವ್ಯವನ್ನೂ  ಸೇವಿಸಿಲ್ಲ” ಎನ್ನುತ್ತಾ ತನ್ನ ಎಡಭಾಗಕ್ಕೆ ತಿರುಗಿ,    “ಅಜ್ಜ, ತಪ್ಪು ತಿಳಿದುಕೊಳ್ಳಬೇಡ, ಯಜಮಾನರು ಏಕೋ ನಿನ್ನನ್ನು ಕರೆದುಕೊಂಡು ಹೋಗುವುದು ಬೇಡ ಎಂದು ಹೇಳುತ್ತಿದ್ದಾರೆ” ಎಂದ.     “ಏನು ದಾಸಪ್ಪ, ನಿನ್ನಷ್ಟಕೆ ನೀನೇ ಮಾತನಾಡಿಕೊಳ್ಳುತ್ತಿದ್ದೀಯ?” ಎಂದು ನಾನು ಆಶ್ಚರ್ಯದಿಂದ ಕೇಳಿದೆ.    “ಸರ್, ನೀವು ಹೇಳುವುದು ಸರಿ ಈ ರೀತಿ, ರಾತ್ರಿ ಹೊತ್ತಿನಲ್ಲಿ ದಾರಿಹೋಕರನ್ನೆಲ್ಲ ಕಾರಿನಲ್ಲಿ ಕರೆದುಕೊಂಡು ಹೋಗುವುದು ಸರಿಯಲ್ಲ”    “ದಾಸಪ್ಪ, ನಿನಗೆ ಆರೋಗ್ಯ ಸರಿ ಇಲ್ಲ ಎಂದು ಕಾಣುತ್ತಿದೆ. ಏಕೋ ಏನೇನೋ ಮಾತನಾಡುತ್ತಿದ್ದೀಯ” ಎಂದು ನಾನು ಅವರ ಮೇಲಿನ ಕರುಣೆಯಿಂದ ಕೇಳಿದೆ.    “ನಿನಗೆ ಕಾರನ್ನು ಚಾಲನೆ ಮಾಡಲು ಸಾಧ್ಯವಾಗುತ್ತದೆಯೋ, ಇಲ್ಲವೋ, ಬೇಕಾದರೆ ನಾನು ಸಹಾಯ ಮಾಡುತ್ತೇನೆ” ಎಂದೆ.    “ನಿಮ್ಮ ಅಭಿಮಾನಕ್ಕೆ ಧನ್ಯವಾದಗಳು ಸರ್, ಯಾಕೋ ನನಗೆ ಬಹಳ ಸುಸ್ತಾದಂತಿದೆ.” ಎನ್ನುತ್ತಾ ಅವನು ಹಾಗೇ ಸೀಟಿಗೆ ಒರಗಿಕೊಂಡು ಕಣ್ಣು ಮುಚ್ಚಿದ. ನಂತರ ಜೋರಾಗಿ ಅಳಲು ಪ್ರಾರಂಭಿಸಿದ. ಆಮೇಲೆ ಇದ್ದಕ್ಕಿದ್ದಂತೆ ಬೆನ್ನು ಬಗ್ಗಿಸಿ ಗೂನುಬೆನ್ನಿನವನಂತೆ ವರ್ತಿಸತೊಡಗಿದ.      ತಕ್ಷಣವೇ ಕಾರಿನಿಂದ ಕೆಳಗಿಳಿದ ನಾನು ಮುಂಬಾಗಕ್ಕೆ ಹೋಗಿ ಬಾಗಿಲು ತೆಗೆದು ಅವನತ್ತ ನೋಡಿದೆ. ಅಲ್ಲಿ ದಾಸಪ್ಪನನ್ನು ಬಿಟ್ಟು ಇನ್ನಾರೂ ಕಾಣಿಸಲಿಲ್ಲ. ಆಗ ಅವನು ವಿಚಿತ್ರವಾಗಿ ವರ್ತಿಸಲು ಪ್ರಾರಂಭಿಸಿದ್ದ. ತನ್ನ ಎರಡು ಕೈಗಳಿಂದ ಕಣ್ಣನ್ನು ಉಜ್ಜಿಕೊಳ್ಳುತ್ತ ಗೂನು ಬೆನ್ನಿನ ಮುದುಕನಂತೆ ವರ್ತಿಸುತ್ತಿದ್ದ. ನಾನು ಅವನ ಆರೋಗ್ಯವನ್ನು ವಿಚಾರಿಸುವ ದೃಷ್ಟಿಯಿಂದ,     “ಏನಪ್ಪಾ, ಈಗ ಹೇಗಿದ್ದೀಯ ಆರೋಗ್ಯವಾಗಿದ್ದೀಯ ತಾನೇ? ಎಂದು ಕೇಳಿದೆ.      “ಹ! ಹ! ಆರೋಗ್ಯ, ಈ ವಯಸಿನಲ್ಲಿ ಇನ್ನೆಂತಹ ಆರೋಗ್ಯ ಸ್ವಾಮಿ” ಎಂದು ಹೇಳುವಾಗ ಅವನ ಧ್ವನಿಯೇ ಬದಲಾದಂತೆ ಕಾಣುತ್ತಿತ್ತು.      “ಏಕಪ್ಪ, ನಿನ್ನ ಧ್ವನಿಯೇ ಬದಲಾದಂತೆ ಕಾಣುತ್ತಿದೆ.”      “ನನ್ನ ಧ್ವನಿ ಇದ್ದಂತೇ ಇದೆ ಸ್ವಾಮಿ, ಹೇಗೆ ತಾನೇ ಬದಲಾವಣೆಯಾಗಲು ಸಾಧ್ಯ? ಎಂಬತ್ತು  ವರ್ಷವಾದ ವ್ಯಕ್ತಿಗೆ ಇದಕ್ಕಿಂತಲೂ ಉತ್ತಮವಾದ ಕಂಠ ಇರಲು ಸಾಧ್ಯವೇ”     “ಅಂದರೆ  ನಿನಗೆ 80 ವರ್ಷವಾಗಿದೆಯೇ?”     “ಅದರಲ್ಲಿ ಯಾವ ಅನುಮಾನವೂ ಇಲ್ಲ.  ನನಗಾಗಲೇ 80 ವರ್ಷ ದಾಟಿ ಹೋಗಿದೆ”     “ಯಾಕೆ? ನಿಮ್ಮ ಈ ಕಾರನ್ನು ಡ್ರೈವ್ ಮಾಡಲು ಯಾರು ಚಾಲಕರು ಸಿಕ್ಕಿಲ್ಲವೇ?”      “ಯಾರೂ ಸಿಗದಿದ್ದರೆ ನಾನು ದೇವಸ್ಥಾನಕ್ಕೆ ತಿರುಗಿ ಹೋಗುತ್ತೇನೆ. ಏಕೆಂದರೆ ನನಗೆ ಬಹಳ ದೂರ ನಡೆಯಲು ಸಾಧ್ಯವಾಗುವುದಿಲ್ಲ”     “ನೀನು ಡ್ರೈವ್ ಮಾಡದೇ ಇದ್ದರೆ ಈ ಕಾರನ್ನು ತೆಗೆದುಕೊಂಡು ಹೋಗುವುದಾದರೂ ಹೇಗೆ? ನಾನು ಬೇರೆ ಡ್ರೈವರನ್ನು ಹುಡುಕಬೇಕು. ಅದು ಹೇಗೆ ಸಾಧ್ಯ?”      “ಈ ಹೊಸ ಮಾದರಿಯ ಗಾಡಿಗಳನ್ನು ನಡೆಸುವುದು  ಹೇಗೆ ಎಂಬುದು ಆ ಭಗವಂತನಿಗೇ ಗೊತ್ತು. ನನ್ನ ಇಡೀ ಜೀವಮಾನದಲ್ಲಿ ಎರಡು ಎತ್ತಿನ ಗಾಡಿಗಳನ್ನು ಬಿಟ್ಟರೆ, ಬೇರೆ ಯಾವ ರೀತಿಯ ವಾಹನಗಳನ್ನೂ ಚಲಿಸಿ ಗೊತ್ತಿಲ್ಲ”      “ನಾನು ನಿಮ್ಮನ್ನು ಒಂದು ಪ್ರಶ್ನೆ ಕೇಳಲೇ?”     “ಕೇ ಳ ಪ್ಪ ಕೇಳು, ಅದೇನು ನಿನ್ನ ಪ್ರಶ್ನೆ”    “ನಮ್ಮ ಪ್ರಜೆಗಳೆಲ್ಲ ಎಲ್ಲಿಗೆ ಹೋಗಿದ್ದಾರೆ?” ,   “ಯಾವ ಪ್ರಜೆಗಳ  ಬಗ್ಗೆ ನೀನು ಕೇಳುತ್ತಿದ್ದೀಯ?”    “ಈ ರಾಜ್ಯದಲ್ಲಿ ವಾಸಿಸುತ್ತಿದ್ದ ಸಾವಿರಾರು ಮಂದಿ ಪ್ರಜೆಗಳು, ಎಲ್ಲಿಗೆ ಹೋಗಿದ್ದಾರೆ?    “ಹೌದು, ಇತ್ತೀಚಿನ ದಿನಗಳಲ್ಲಿ ಯಾರೂ ಕಾಣಿಸುತ್ತಿಲ್ಲ. ಎಲ್ಲರೂ ಎಲ್ಲಿ ಹೋಗಿದ್ದಾರೋ ಗೊತ್ತಿಲ್ಲ. ದೇವಸ್ಥಾನದಲ್ಲಿ ದೇವರ ದರ್ಶನ ಮಾಡಲೂ ಸಹ ಯಾರೂ ಬರುತ್ತಿಲ್ಲ. ಈ ರಾಜ್ಯದ ಮಹಾರಾಜನು ಕೂಡ ದೇವರು ದರ್ಶನಕ್ಕಾಗಿ ಬರುತ್ತಿಲ್ಲ. ಹಿಂದಿನ ದಿನಗಳಲ್ಲಾದರೆ ವರ್ಷಕ್ಕೆ ಒಂದು ಬಾರಿಯಾದರೂ ರಾಜ ಬಂದೇ ಬರುತ್ತಿದ್ದ”    “ಯಾವ ರಾಜನ ಬಗ್ಗೆ ನೀನು ಹೇಳುತ್ತಿರುವುದು?” ನಾನು ಕೇಳಿದಾಗ, ಅವನಿಗೆ ಒಮ್ಮೆಲೇ ನನ್ನ ಮೇಲೆ ಸಿಟ್ಟು ಬಂದಂತೆ ಕಾಣಿಸಿತು.    “ಹುಚ್ಚುಹುಚ್ಚಾಗಿ ಏನನ್ನೋ ಮಾತನಾಡಬೇಡ. ನಾನು ಹೋಗುತ್ತೇನೆ ಎನ್ನುತ್ತಾ ಅವನು ಬಾಗಿಲಿನ ಮೇಲೆ ಹಾಗೆಯೇ ಬಾಗಿದ”. ನಂತರ ಸಾವರಿಸಿಕೊಂಡು,    “ನನ್ನ ಬಗ್ಗೆ ನಿನಗೆ ಏನೂ ಗೊತ್ತಿಲ್ಲ ಎಂದು ಕಾಣಿಸುತ್ತಿದೆ.” ಎಂದು ಹೇಳುತ್ತಾ ನನ್ನನ್ನು ಪಕ್ಕಕ್ಕೆ ತಳ್ಳಿ ಕಾರಿನಿಂದ ಕೆಳಗಿಳಿದ    ಹೀಗೆ  ಇಳಿದವನು ಗೂನು ಬೆನ್ನಿನವನ ರೀತಿಯಲ್ಲಿ ಬಾಗಿ ನಡೆಯುತ್ತಾ ದೇವಸ್ಥಾನದ ಕಡೆಗೆ ಹೊರಟ. ನನಗೆ ಏನು ಮಾಡಬೇಕೆಂದೇ ಗೊತ್ತಾಗಲಿಲ್ಲ. ನಾನೂ ಅವನ ಜೊತೆಯಲ್ಲಿ ದೇವಸ್ಥಾನದ ಕಡೆಗೆ ಹೊರಟೆ.    ದೇವಸ್ಥಾನದ ಬಳಿಗೆ ಹೋಗಿ ನಿಂತ ಅವನು ನನ್ನ ಕಡೆಗೆ ತಿರುಗಿ ನೋಡುತ್ತಾ,   “ಹೋಗು, ಹೋಗು, ಇಲ್ಲಿಂದ ಹೊರಟು ಹೋಗು,  ನನಗೆ ನಿನ್ನ ಸಹವಾಸ ಸಾಕಾಗಿ ಹೋಗಿದೆ” ಎಂದು ಆರ್ಭಟಿಸಿದ. ದಾನಪ್ಪ ಎಂದೂ ಈ ರೀತಿ ಮಾತನಾಡಿದುದನ್ನು ನಾನು ನೋಡಿರಲಿಲ್ಲ. ಹಾಗಾಗಿ ನಾನು,    “ದಾಸಪ್ಪ ನಿನಗೇನಾಗಿದೆ? ಯಾಕೆ ಹೀಗೆ ವಿಚಿತ್ರವಾಗಿ ಆಡುತ್ತಿದ್ದೀಯ?” ಎಂದು ನಾನು ನಿಧಾನವಾಗಿ ಕೇಳಿದೆ.    “ಇಲ್ಲಿ ದಾಸಪ್ಪ ಎನ್ನುವವರು ಯಾರೂ ಇಲ್ಲ. ಆಗಿನಿಂದ ‘ದಾಸಪ್ಪ, ದಾಸಪ್ಪ, ದಾಸಪ್ಪ’ ಎಂದು ಅರಚುತ್ತಿದ್ದೀಯಲ್ಲ, ನನ್ನನ್ನು ಹೆಸರಿಡಿದು ಕರಿ, ಇಲ್ಲದಿದ್ದರೆ ಇಲ್ಲಿಂದ ಹೊರಟುಹೋಗು ಬರಬೇಡ, ನನ್ನನ್ನು ಹಿಂಬಾಲಿಸಿ ಬರಬೇಡ” ಎಂದು ಮತ್ತೊಮ್ಮೆ ಘರ್ಜಿಸಿದ.    “ನಿನ್ನ ಹೆಸರೇನು? ಹೇಳಪ್ಪ”    “ನನ್ನ ಹೆಸರು ಕೃಷ್ಣಭಟ್ಟ , ಇನ್ನು ಮುಂದೆ ನನ್ನನ್ನು ಕೃಷ್ಣಭಟ್ಟ ಎಂದೇ ಕರೆಯುಬೇಕು, ಗೊತ್ತಾಯಿತೇ?.”     “ಈ ಊರಿನಲ್ಲಿ ಹೋಗಿ ಯಾರನ್ನು ಬೇಕಾದರೂ ಕೇಳು. ಎಲ್ಲರಿಗೂ ನನ್ನ ಪರಿಚಯ ಇದೆ

ಕಾಡಿನಲ್ಲಿ ಕಾಡಿದ ಭೂತ Read Post »

ಕಾವ್ಯಯಾನ

ಕಾಡುವ ಕವಿತೆಗೆ

ಕವಿತೆ ಕಾಡುವ ಕವಿತೆಗೆ ಅಬ್ಳಿ,ಹೆಗಡೆ ಹೊತ್ತಿಲ್ಲ ಗೊತ್ತಿಲ್ಲಕಾಡುವಾ ಕವಿತೆ.ಬೇಕೆಂದು ಕರೆದಾಗನೀನೆಲ್ಲಿ ಅವಿತೆ..?ಬಂದಿಲ್ಲಿ ಅಕ್ಕರೆಯಸಕ್ಕರೆಯ ನೀಡು.ನನ್ನೆದೆಯ ಅಕ್ಕರದಿನೀ…ನಾಟ್ಯವಾಡು.ಕಂಕುಳಲಿ ಕೈಯ್ಯಿಟ್ಟುಗಿಲಗಿಚ್ಚಿಯಾಡಿ.ನೋವಲ್ಲು ನಗಿಸುತ್ತಮಾಡುವೆಯೆ ಮೋಡಿ.ತುಂಟಾಟವಾಡುತಲಿಕಳೆದೆನ್ನ ‘ಹಮ್ಮು’.ತಂಟೆಮಾಡದೆ ಒಳಗೆಉಳಿಯೆ ‘ಖಾಯಮ್ಮು’.! ****************************************

ಕಾಡುವ ಕವಿತೆಗೆ Read Post »

ಅಂಕಣ ಸಂಗಾತಿ, ರಹಮತ್ ತರೀಕೆರೆ ಬರೆಯುತ್ತಾರೆ

ಅಂಕಣ ಬರಹ ಗಂಗಾವತಿಯ `ಜಜ್ಬ್’ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಉರ್ದು ಪಂಡಿತರ ಪಡೆಯೊಂದು ಈಚಿನವರೆಗೂ ಇತ್ತು. ನಿಜಾಂ ಸಂಸ್ಥಾನದಲ್ಲಿ ಉರ್ದು ಆಡಳಿತ ಹಾಗೂ ಶಿಕ್ಷಣದ ಭಾಷೆಯಾಗಿದ್ದು, ಸಹಜವಾಗಿಯೇ ಈ ಭಾಗದ ಎಲ್ಲ ಜಾತಿಮತಗಳ ಜನ ಉರ್ದುವಿನಲ್ಲಿ ಶಿಕ್ಷಣ ಪಡೆದರು. ಅವರಲ್ಲಿ ಕೆಲವರು ಆಡಳಿತಾತ್ಮಕ ಉರ್ದುವಿನಲ್ಲಿ ವಿಶೇಷ ಪರಿಣತಿ ಪಡೆದುಕೊಂಡರು. 1948ರಲ್ಲಿ ಸಂಸ್ಥಾನವು ಭಾರತ ಒಕ್ಕೂಟದಲ್ಲಿ ವಿಲೀನಗೊಂಡಿತು. ಹಳೇ ಗುಲಬರ್ಗ ಬೀದರ್ ರಾಯಚೂರು ಜಿಲ್ಲೆಗಳು ಏಕೀಕೃತ ಕರ್ನಾಟಕದ ನಕ್ಷೆಯೊಳಗೆ ಬಂದವು. ಈ ರಾಜಕೀಯ ಪಲ್ಲಟವು ಉರ್ದು ಪಂಡಿತರನ್ನು ಇದ್ದಕ್ಕಿದ್ದಂತೆ ಅಪ್ರಸ್ತುತಗೊಳಿಸಿತು-ಪವರ್‍ಲೂಮ್ ಬಂದೊಡನೆ ಕೈಮಗ್ಗದ ಕೈಮುರಿದಂತೆ. ಇದರಿಂದ ಉರ್ದು ಲೇಖಕರು ಅಪ್ರಸ್ತುತಗೊಳ್ಳಲಿಲ್ಲ. ಬದಲಿಗೆ ಎರಡು ಭಾಷೆಗಳ ನಡುವಿನ ಸಾಹಿತ್ಯಕ ಮತ್ತು ಸಾಂಸ್ಕøತಿಕ ಆದಾನ ಪ್ರದಾನ ಮುಂದುವರೆಸಿದರು. ಶಾಂತರಸ, ದೇವೇಂದ್ರಕುಮಾರ ಹಕಾರಿ, ಸಿದ್ಧಯ್ಯ ಪುರಾಣಿಕ, ಚನ್ನಬಸವಪ್ಪ ಬೆಟದೂರು, ಮುದ್ದಣ ಮಂಜರ್, ಡಿ.ಕೆ.ಭೀಮಸೇನರಾವ್, ಜಂಬಣ್ಣ ಅಮರಚಿಂತ, ಚಂದ್ರಕಾಂತ ಕುಸನೂರು, ಪಂಚಾಕ್ಷರಿ ಹಿರೇಮಠ-ಇದನ್ನು ಮಾಡಿದರು. ಇವರಲ್ಲಿ ಭೀಮಸೇನರನ್ನು ಬಿಟ್ಟು ಉಳಿದವರ ಜತೆ ಒಡನಾಟ ಮಾಡುವ ಅವಕಾಶ ನನಗೆ ಸಿಕ್ಕಿತು. ಉರ್ದುನಲ್ಲಿ ಕವಿತೆ ಬರೆಯುತ್ತಿದ್ದ, ಇಕ್ಬಾಲರ ಕಾವ್ಯವನ್ನು ಅನುವಾದಿಸಿದ್ದ ಮುದ್ದಣ್ಣ `ಮಂಜರ್’ ಅವರ ಜತೆ, ಉರ್ದು-ಕನ್ನಡ ಅನುವಾದ ಕಮ್ಮಟದಲ್ಲಿ (1985) ಒಡನಾಡಿದ ನೆನಪು ಬರುತ್ತಿದೆ. ಶಾಂತರಸ, ಹಕಾರಿ, ಬೆಟದೂರರು ಕೂಡಿದಾಗ ಉರ್ದುವಿನಲ್ಲೇ ಹರಟುತ್ತಿದ್ದರು. ಶಾಂತರಸರು `ಉಮ್ರಾವ್‍ಜಾನ್’ ಕಾದಂಬರಿ ಅನುವಾದಿಸಿದರು; ಗಜಲುಗಳ ಬಗ್ಗೆ ವಿದ್ವತ್‍ಪೂರ್ಣ ಲೇಖನ ಬರೆದರು. ಕರಾವಳಿ ಭಾಗದಲ್ಲಿ ಮದ್ರಾಸ್ ವಿಶ್ವವಿದ್ಯಾಲಯದ ಮೂಲಕ ಹೊಮ್ಮಿದ ಕನ್ನಡ ಪಂಡಿತ ಪರಂಪರೆಯಿದ್ದಂತೆ, ಹೈದರಾಬಾದ್ ಕರ್ನಾಟಕದಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ಬಂದ ಉರ್ದು ಪಂಡಿತ ಪರಂಪರೆ, ಕರ್ನಾಟಕ ಸಂಸ್ಕøತಿಗೆ ಕಸುವನ್ನು ಕೂಡಿಸಿತು. ಈ ಪರಂಪರೆಯ ಲೇಖಕರಲ್ಲಿ ಗಂಗಾವತಿಯ ರಾಘವೇಂದ್ರರಾವ್ ಜಜ್ಬ್ ಸಹ ಒಬ್ಬರು. ಇವರು ತಮ್ಮ ಪರಿಚಯವನ್ನು ಬರೆದುಕೊಂಡಿರುವ ರೀತಿ ಸ್ವಾರಸ್ಯಕರವಾಗಿದೆ: “ರಾಘವೇಂದ್ರ ನಾಮ. `ಜಜ್ಬ್’ ಅಂಕಿತ. ರಾಯಚೂರು ಜಿಲ್ಲೆಗೆ ಸೇರಿದ ಗಂಗಾವತಿ ಜನ್ಮಸ್ಥಳ. ದತ್ತಪುತ್ರನಾಗಿ ಆಲಂಪುರದಲ್ಲಿ ಬೆಳೆದನು. 20ರ ಏಪ್ರಿಲ್ 1898 ಇವನ ಜನ್ಮದಿನ. ಮಾತೃಭಾಷೆ ಕನ್ನಡ. ಪ್ರಾಂತೀಯ ಭಾಷೆ ತೆಲುಗು. ರಾಜಭಾಷೆ ಉರ್ದು. ಅರಬ್ಬಿ ಫಾರಸಿ ಭಾಷೆಯಲ್ಲಿ ಕಿಂಚಿತ್ ಶಿಕ್ಷಣವಾಗಿದೆ. ಅಲ್ಪಸ್ವಲ್ಪ ಸಂಸ್ಕøತ ಪರಿಚಯವೂ ಇದೆ. ವಕೀಲಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ 18-20 ವರ್ಷ ಪ್ರಾಕ್ಟೀಸ್ ಮಾಡಿ ಬಿಟ್ಟುಕೊಟ್ಟನು. ವಿದ್ಯಾರ್ಥಿಯಾಗಿರುವಾಗಲೇ ಕವಿತ್ವದ ಕಡೆಗೆ ಲಕ್ಷ್ಯವಿತ್ತು. ಎಲ್ಲ ವಿಧದ ಕವನಗಳನ್ನೂ ಬರೆದಿದ್ದಾನೆ. ರುಬಾಯಿ ರಚನೆಯಲ್ಲಿ ಅಭಿರುಚಿ ವಿಶೇಷವಿದೆ. ಅನೇಕ ಸಂಸ್ಕøತ ಕನ್ನಡ ತೆಲುಗು ಗ್ರಂಥಗಳ ಪದ್ಯಾನುವಾದ ಮಾಡಿದ್ದಾನೆ. ಎರಡು ಭಾಗಗಳಲ್ಲಿ ರುಬಾಯಿಯಾತ್ ಪ್ರಕಟವಾಗಿದೆ. ಅಖಿಲ ಆಂಧ್ರ ಮಜಲಿಸ್ಸಿನವರು `ಖಯ್ಯಾಮ ಎ ಆಂಧ್ರ’ ಎಂಬ ಬಿರುದನ್ನು ದಯಪಾಲಿಸಿದ್ದಾರೆ. ಕನ್ನಡ-ಕನ್ನಡ-ಉರ್ದುಕೋಶವನ್ನು ಬರೆದಿದ್ದಾನೆ.’’ ಸಂಕೋಚ ಮತ್ತು ನಮ್ರ ಪ್ರವೃತ್ತಿಯ ವ್ಯಕ್ತಿಗಳು ಮಾತ್ರ ಹೀಗೆ ಪರಿಚಯಿಸಿಕೊಳ್ಳಬಲ್ಲರು. ಅತಿರಂಜಿತ ಬಯೊಡೇಟವನ್ನು ಬ್ಯಾಗಿನಲ್ಲಿಟ್ಟುಕೊಂಡು ಅಧಿಕಾರಸ್ಥರ ಹಿಂದೆಮುಂದೆ ಸುತ್ತುವವರು ಈ ನೀರಸ ಶೈಲಿಗೆ ನಗಬಹುದು. ಜಜ್ಬ್ ಹುಟ್ಟಿದ ವರ್ಷವೇನೊ ಸಿಗುತ್ತಿದೆ. ತೀರಿಕೊಂಡ ತೇದಿ ತಿಳಿಯುತ್ತಿಲ್ಲ. ಅವರ ಮನೆತನದವರು ಎಲ್ಲಿದ್ದಾರೊ ತಿಳಿಯದು. ಅವರ ಚಿತ್ರಪಟವಾದರೂ ಸಿಕ್ಕರೆ ನೋಡಲು ಸಾಧ್ಯವಾಗಬಹುದೆಂದು ಆಸೆ ಇರಿಸಿಕೊಂಡಿರುವೆ. `ಜಜ್ಬ್’ ಹೆಸರು ನನ್ನ ನಜರಿಗೆ ಬಿದ್ದಿದ್ದು `ಉರ್ದು ಮತ್ತು ಫಾರಸಿ ಸಾಹಿತ್ಯ’ ಎಂಬ ಪುಸ್ತಕದ ಮೂಲಕ. ಹಳದಿ ರಂಗಿನ ಸಾದಾರಟ್ಟಿನ ಈ ಪುಸ್ತಕದ ಮುಖಬೆಲೆ 3 ರೂ 75 ಪೈಸೆ. ಮೈಸೂರಲ್ಲಿ ಕಲಿಯುತ್ತಿದ್ದ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಕೊಡಮಾಡುವ ಅರ್ಧಬೆಲೆಗೆ ಅದನ್ನು ಅಷ್ಟೊಂದು ಉಪಯುಕ್ತ ಪುಸ್ತಕವೆಂಬ ಖಬರಿಲ್ಲದೆ ಖರೀದಿಸಿದ್ದೆ. ಅದು ಮತ್ತೆಮತ್ತೆ ಬಳಸುತ್ತಿರುವ ಅಪರೂಪದ ಪುಸ್ತಕಗಳಲ್ಲಿ ಒಂದಾಯಿತು. ಈ ಪುಸ್ತಕ ಪ್ರಕಟವಾಗಿದ್ದು ಮೈಸೂರು ವಿಶ್ವವಿದ್ಯಾನಿಲಯದ ಪ್ರಚಾರೋಪನ್ಯಾಸ ಮಾಲೆಯಲ್ಲಿ. ಸಾಮಾನ್ಯ ಜನರಿಗೆ ಲೋಕದ ವಿಷಯಗಳ ಮೇಲೆ ಕನ್ನಡದಲ್ಲಿ ತಿಳುವಳಿಕೆ ಕೊಡುವುದು ವಿಶ್ವವಿದ್ಯಾಲಯದ ವಿದ್ವಾಂಸರ ಕರ್ತವ್ಯ ಎಂಬ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಅನಿಸಿತು. ಅವರಾಶಯಕ್ಕೆ ಅನುಗುಣವಾಗಿ, ಬಿ.ಎಂ. ಶ್ರೀಕಂಠಯ್ಯನವರ ಕಾಲದಲ್ಲಿ ವಿಶ್ವವಿದ್ಯಾನಿಲಯ ಸದರಿ ಯೋಜನೆ ಆರಂಭಿಸಿತು. ವಿದ್ವಾಂಸರು ತಮಗೆ ಪಾಂಡಿತ್ಯವಿರುವ ಕ್ಷೇತ್ರದಲ್ಲಿ ಯಾವುದಾದರೂ ವಿಷಯ ಆರಿಸಿಕೊಂಡು, ಒಂದು ಊರಿನಲ್ಲಿ ಉಪನ್ಯಾಸ ಮಾಡಬೇಕು. ನಂತರ ಪುಸ್ತಕ ರೂಪದಲ್ಲಿ ಬರೆದುಕೊಡಬೇಕು. ಈ ಯೋಜನೆಯಲ್ಲಿ ಜಜ್ಬ್ ಉರ್ದು ಮತ್ತು ಫಾರಸಿ ಸಾಹಿತ್ಯ ಪರಿಚಯಿಸುವ ಉಪನ್ಯಾಸ ಮಾಡಿದರು. ಅದು ಪುಸಕ್ತವಾಗಿ 1964ರಲ್ಲಿ ಹೊರಬಂದಿತು. ಇದರಲ್ಲಿ ಉರ್ದು ಭಾಷೆಯ ಹುಟ್ಟು, ಅದರ ಹುಟ್ಟಿನಲ್ಲಿ ದಕ್ಷಿಣ ಭಾರತದ ಪಾತ್ರ, ಅದರ ಬೆಳವಣಿಗೆ, ಅದರಲ್ಲಿ ಹುಟ್ಟಿದ ಸಾಹಿತ್ಯ, ಫಾರಸಿಯ ಮುಖ್ಯ ಕವಿಗಳು-ಹೀಗೆ ವಿಭಿನ್ನ ನಮೂದುಗಳ ಮೇಲೆ ಅಧ್ಯಾಯಗಳಿವೆ. ಇದರ ವಿಶೇಷವೆಂದರೆ- ಉರ್ದು ಕವಿತೆಗಳನ್ನು ಕನ್ನಡ ಲಿಪಿಯಲ್ಲಿ ಮುದ್ರಿಸಿ ಅವಕ್ಕೆ ತರ್ಜುಮೆ ಕೊಟ್ಟಿರುವುದು; ಭಾರತ ಮತ್ತು ಕರ್ನಾಟಕದ ಉರ್ದು ಕವಿಗಳ ಪರಿಚಯ ಕೊಟ್ಟಿರುವುದು. ಈ ಕವಿಗಳಲ್ಲಿ ಅರ್ಧಕ್ಕಿಂತ ಹೆಚ್ಚು ಇಸಮು ಮುಸ್ಲಿಮರಲ್ಲ. ಉರ್ದು ಮುಸ್ಲಿಮರ ಭಾಷೆಯೆಂಬ ಅರೆಸತ್ಯದ ತಿಳುವಳಿಕೆ ಕಲಿತವರಲ್ಲಿದೆ. ಆದರೆ ಅದರ ಪ್ರಥಮ ಜ್ಞಾನಪೀಠ ಪ್ರಶಸ್ತಿ ಬಂದಿದ್ದು ಗೋರಖಪುರದ ರಘುಪತಿ `ಫಿರಾಕ್’ ಅವರಿಗೆ. ಉರ್ದುವನ್ನು ಮತಾತೀತ ಭಾಷೆಯನ್ನಾಗಿ ನೋಡಬೇಕೆಂದು ಜಜ್ಬರ ಆಶಯವಾಗಿತ್ತು. ಕೃತಿಯ ಅಖೈರಿನಲ್ಲಿ “ಮುಸ್ಲಿಮರು ಉರ್ದುವನ್ನು ತಮ್ಮದೆಂದು ಹಕ್ಕುಸಾಧಿಸುತ್ತ ಅದಕ್ಕೊಂದು ಧಾರ್ಮಿಕತೆ ಕಲ್ಪಿಸಿದರು. ಅದು ಮುಸ್ಲಿಮರದೆಂದು ಉಳಿದವರು ಅದನ್ನು ದೂರವಿಟ್ಟು ಹಿಂದಿಯನ್ನು ಅಪ್ಪಿಕೊಂಡರು. ಇವೆರಡನ್ನೂ ಒಳಗೊಂಡ ಹಿಂದೂಸ್ತಾನಿ ಭಾರತದ ಭಾಷೆಯಾಗಬೇಕೆಂದು ಗಾಂಧಿ ಬಯಸಿದರು. ಆದರೆ ಅದು ಸಾಧ್ಯವಾಗಲಿಲ್ಲ. ಅದು ಸಾಧ್ಯವಾಗಿದ್ದರೆ ಉರ್ದುವಿಗೆ ಈ ಸ್ಥಿತಿ ಬರುತ್ತಿರಲಿಲ್ಲ’’ ಎಂದು ವಿಷಾದದಿಂದ ಜಜ್ಬ್ ವ್ಯಾಖ್ಯಾನಿಸುತ್ತಾರೆ. ಹೈದರಾಬಾದ್ ಕರ್ನಾಟಕದಲ್ಲಿ ಜಜ್ಬ್ ‍ರಂತಹ ಉರ್ದು ವಿದ್ವಾಂಸರು ನೂರಾರಿದ್ದರು. ಎಲ್ಲರೂ ಒಬ್ಬೊಬ್ಬರಾಗಿ ಕಣ್ಮರೆಯಾದರು. ಕೆಲವು ಹಿರಿಯರು ತಮ್ಮ ಬಾಳಿನ ಕೊನೆಯಂಚಿಗಿದ್ದಾರೆ. ಈ ಭಾಗದ ಹಿಂದಿನ ರೆವಿನ್ಯೊ ದಾಖಲೆಗಳೆಲ್ಲ ಉರ್ದುವಿನಲ್ಲಿದ್ದು, ಈಗಲೂ ತಹಸಿಲ್ದಾರರು-ಜಿಲ್ಲಾಧಿಕಾರಿಗಳು ಅಗತ್ಯ ಬಿದ್ದಾಗ ಈ ಪಂಡಿತರನ್ನು ಕರೆದು ನೆರವನ್ನು ಪಡೆವುದುಂಟು. ಹೆಚ್ಚಿನವರು ಪ್ರಭುತ್ವದ ಭಾಷೆಯಾಗಿದ್ದ ಉರ್ದುವನ್ನು ಹೊಟ್ಟೆಪಾಡಿಗಾಗಿ ಕಲಿತರೆ; ಜಜ್ಬ್ ರಂತಹ ಕೆಲವರು ಉರ್ದುವಿನಲ್ಲಿರುವ ಸಾಹಿತ್ಯದ ರುಚಿಗಾಗಿ ಕಲಿತರು. ಸ್ವತಃ ಉರ್ದುವಿನಲ್ಲಿ ಸಾಹಿತ್ಯ ರಚನೆ ಮಾಡಿದರು.ಜಜ್ಬ್ ಉರ್ದುವಿಗೆ ಸಂಸ್ಕøತದಲ್ಲಿದ್ದ ಭರ್ತೃಹರಿಯ ಶತಕಗಳನ್ನೂ ಕನ್ನಡದ ಸೋಮೇಶ್ವರ ಶತಕವನ್ನೂ ಅನುವಾದಿಸಿದರು. ಶತಕದ “ಪೊಡೆಯಲ್ ತುಂಬಿರೆ ಪಂಕ ಮೇಲೆ ತೊಳೆಯಲ್ ತಾಂ ಶುದ್ದನೇನಪ್ಪನೇ!’ ಚರಣ ಅವರಲ್ಲಿ “ಸಫಾಯೀಕೇ ಲಿಯೇ ಧೋಯಾ ಕೋ ಅಪ್ನಾ ತನೇ ಖಾಖೀ, ಮಗರ್ ಇಸಸೇ ನಹೀ ಹೋತೀ ಹೈ ದಿಲ್ ಕಿ ದೂರ ನಾಪಾಕೀ’’ ಎಂದಾಗುತ್ತದೆ. ಜಜ್ಬ್ ತಮ್ಮ ಜೀವಿತ ಕಾಲದಲ್ಲಿ ಅಖಿಲ ಭಾರತ ಮಟ್ಟದ ಮುಶಾಯಿರಗಳಲ್ಲಿ ಭಾಗವಹಿಸುತ್ತಿದ್ದರು. ಅವರ ರುಬಾಯಿಗಳನ್ನು ಕವಿಗಳಾದ ಪಂಡಿತ ದತ್ತಾತ್ರೇಯ ಕೈಫಿ, ಮೋಹನ್ ಸಿಂಗ್ ದೀವಾನಾ, ಮುಲ್ಲಾರ ಮೂಜಿ, ಶಾಹಿದ್ ಸಿದ್ದಿಕಿ ಮುಂತಾದವರು ಹೊಗಳಿದ್ದಾರೆ. ಈ ರುಬಾಯಿಗಳನ್ನು (ಚೌಪದಿ) ಉರ್ದು ಅಕಾಡೆಮಿ ಮರುಮುದ್ರಿಸಬೇಕು. `ಉರ್ದು ಮತ್ತು ಫಾರಸಿ ಸಾಹಿತ್ಯ’ ಕೃತಿಯದೂ ಮರುಮುದ್ರಣ ಆಗಬೇಕು. ಜಜ್ಬ್ ಉರ್ದುಪಂಡಿತ ಮಾತ್ರ ಆಗಿರಲಿಲ್ಲ. ಮಾನವತಾವಾದಿ ಕವಿಯೂ ಆಗಿದ್ದವರು; ಕನ್ನಡ-ಉರ್ದು ಪಾಂಡಿತ್ಯ ಪರಂಪರೆಯ ಕೊಂಡಿಗಳಲ್ಲಿ ಒಂದಾಗಿದ್ದವರು; ಮುಖ್ಯವಾಗಿ ಎರಡು ಧಾರ್ಮಿಕ ಸಮುದಾಯಗಳ ನಡುವೆ ಸೇತುವಿನಂತಿದ್ದವರು. ಈಗಂತೂ ಸೇತುವೆ ಕೊಂಡಿಗಳದ್ದೇ ಕೊರತೆ. ಅವರ ರುಬಾಯಿಯೊಂದು ಹೀಗಿದೆ: ಯಾರಬ್ ಕೋಯಿ ಚಾಹೇ ತೊ ಹುಕೂಮತ್ ದೇದೇಚಾಹೇ ಜೊ ಕೋಯೀ ತೊ ಮಾಲ್ ವ ದೌಲತ್ ದೇದೇಜಿನ್‍ಜಿನ್‍ಕಿ ಜೋ ಖಾಹಿಷ್ ಹೋ ಅತಾಕರ್ ವಹ್‍ಸಬ್ಲೇಖಿನ್ ಮುಝೆ ಸಿರ್ಫ್ ಅದಮಿಯ್ಯತ್ ದೇದೇ( `ಓ ದೇವರೇ, ಯಾರಾದರೂ ಅಧಿಕಾರ ಬೇಡಿದರೆ ಕೊಡು, ಧನ ಬೇಡಿದವರಿಗೆ ಧನಕೊಡು, ಯಾರೇನು ಬೇಡುವರೊ ಅವರಿಗದನ್ನು ಕೊಡು, ನನಗೆ ಮಾತ್ರ ಮನುಷ್ಯತ್ವವನ್ನು ನೀಡು.’) ಕನ್ನಡ ಮತ್ತು ಉರ್ದು ಸಾಹಿತ್ಯದಲ್ಲಿ ಜಜ್ಬ್ ಶ್ರೇಷ್ಠ ಲೇಖಕ ಇರಲಿಕ್ಕಿಲ್ಲ. ಆದರೆ ಕೆಲವು ಹೆಸರಾಂತ ಲೇಖಕರು ಚರಿತ್ರೆಯಿಂದ ಕಹಿಯನ್ನೇ ಹೆಕ್ಕಿತೆಗೆದು ಮಂಡಿಸುವ ಸಾಹಿತ್ಯ ರಚಿಸುತ್ತಿರುವಾಗ, ಜಜ್ಬರ ಮನುಷ್ಯತ್ವದ ಹಂಬಲ ಅಪೂರ್ವವಾಗಿ ಕಾಣುತ್ತದೆ. ಕಲೆಗಾರಿಕೆ ಮತ್ತು ಜೀವನದೃಷ್ಟಿಕೋನ ಇವುಗಳ ನಡುವೆ ನಮ್ಮ ಪ್ರಥಮ ಆಯ್ಕೆ ಯಾವುದು? ಪ್ರತಿಯೊಂದು ಆಯ್ಕೆಯನ್ನು ಆಯಾ ಕಾಲ ದೇಶ ಸನ್ನಿವೇಶ ಮತ್ತು ವ್ಯಕ್ತಿಯ ತುರ್ತುಗಳು ನಿರ್ಧರಿಸುತ್ತವೆ. ಭಾರತದ ಸಾಂಸ್ಕøತಿಕ ಸಮೃದ್ಧಿಗೆ ಜಜ್ಬರಂತಹ ಪಂಡಿತರು; ನಜರುಲ್ ಇಸ್ಲಾಮರಂತಹ ಬಂಗಾಳಿ ಕವಿಗಳು; ಗಂಗೆ-ಕಾಶಿಗಳ ಜತೆ ಆಪ್ತಸಂಬಂಧವಿದ್ದ ಬಿಸ್ಮಿಲ್ಲಾಖಾನರಂತಹ ಸಂಗೀತಗಾರರು ಕಾರಣರು. ಇಂತಹ ಕೂಡುಸಂಸ್ಕøತಿಯ ಅರಿವೇ ಇರದ, ಇದ್ದರೂ ಸಮ್ಮತಿಸಿದ ಸಾಂಸ್ಕøತಿಕ ಅನಕ್ಷರತೆ ವ್ಯಾಪಕವಾಗಿ ಹಬ್ಬುತ್ತಿರುವಾಗ, ಜಜ್ಬರಂತಹ ಪಂಡಿತರ ಚಿತ್ರಗಳು ಚರಿತ್ರೆಯ ವಿಸ್ಮøತಿಗೆ ಸೇರಿದರೆ ಸೋಜಿಗವಿಲ್ಲ. (ನೇಹಿಗರೇ, ಪಂಡಿತ ರಾಮಭಾವು ಬಿಜಾಪುರೆ ಅವರ ಬಗ್ಗೆ ನಾನು ಹಿಂದೆ ಬರೆದ ಟಿಪ್ಪಣಿಯನ್ನು `ಫೇಸ್‍ಬುಕ್ಕಿನಲ್ಲಿ ಹಂಚಿಕೊಳ್ಳಲು ಸಾಧ್ಯವೇ? ಎಂದು ಕವಿ ಕವಿತಾ ಕುಸುಗಲ್ ಕೇಳಿದರು. ಇದೊಂದು ಬರೆಹ ಪ್ರಕಟಿಸುವ ತಾಣವೂ ಆಗಿದೆ ಎಂದು ಗೊತ್ತಾಗಿದ್ದು ಆಗಲೇ. ಕಷ್ಟಪಟ್ಟು ಬಲಿಪಶು ಹುಡುಕುತ್ತಿದ್ದ ಚಿರತೆಗೆ ಕಾಲ್ನಡೆ ತುಂಬಿದ ಕೊಟ್ಟಿಗೆಗೆ ಬಿಟ್ಟಂತಾಯಿತು. ಅಂದಿನಿಂದ ಹೊಸ ಪುಸ್ತಕಕ್ಕಾಗಿ ಸಿದ್ಧಪಡಿಸಿದ ಹಳೆಯ ಟಿಪ್ಪಣಿಗಳನ್ನು ಹಾಕುತ್ತ ನಿಮ್ಮ ಮೇಲೆ ಎರಗುತ್ತಿರುವೆ. ಸಿಗುತ್ತಿರುವ ಮೆಚ್ಚು ಕಸುವು ತುಂಬುತ್ತಿದೆ; ಟೀಕೆಗಳು ತಿದ್ದಿ ನೇರ್ಪಡಿಸುತ್ತಿವೆ. ಪುಸ್ತಕ ಪ್ರಕಟವಾಗುವವರೆಗೂ ನಿಮಗೆ ಈ ಕಾಟದಿಂದ ಮುಕ್ತಿಯಿಲ್ಲವೆಂದು ಕಾಣುತ್ತದೆ. ಸ್ನೇಹದ ತರೀಕೆರೆ) ********************************************* ರಹಮತ್ ತರಿಕೆರೆಯವರು- ಕನ್ನಡದ ಗಮನಾರ್ಹ ಲೇಖಕ. ಹಂಪಿ ವಿಶ್ವವಿದ್ಯಾಲಯದ ಪ್ರೋಫೆಸರ್. ನಾಡಿನ ಸಂಸ್ಕೃತಿ, ಸೌಹಾರ್ದತೆಯ ಬೇರುಗಳ ಜಾಡು ಹಿಡಿದು, ಆಯಾ ಊರುಗಳಿಗೆ ಹೋಗಿ, ಮಾಹಿತಿ ಹಾಕಿ, ಅಲ್ಲಿನ ಜನರ ಜೊತೆ ಬೆರೆತು, ಸಂಶೋಧನಾ ಲೇಖನಗಳನ್ನು ಬರೆದವರು.‌ಕರ್ನಾಟಕದ ಸಂಗೀತಗಾರರು ಹಾಗೂ ಅವರು ದೇಶದ ಇತರೆ ಭಾಗಗಳಲ್ಲಿ ನೆಲೆಸಿದವರ ಬಗ್ಗೆ ಹುಡುಕಾಡಿ ಬರೆದವರು. ಅವರ ನಿರೂಪಣಾ ಶೈಲಿ ಅತ್ಯಂತ ಆಕರ್ಷಕ. ಮನಮುಟ್ಟುವಂತೆ ಬರೆಯುವ ರಹಮತ್ ತರೀಕೆರೆ ಕನ್ನಡದ ,ಬಹುತ್ವದ ,ಸೌಹಾರ್ದತೆಯ ಪ್ರತೀಕವೂ ಆಗಿದ್ದಾರೆ

Read Post »

You cannot copy content of this page

Scroll to Top