ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಗಝಲ್

ಗಝಲ್ ಪ್ರಭಾವತಿ ಎಸ್ ದೇಸಾಯಿ ಅರಳಿದ ಸುಮ ದೇವರಿಗೆ ಅಪಿ೯ತವಾಗಲಿ ಬಾಡುವ ಮುನ್ನವೀಣೆ ತಂತಿ ಮೀಟಿ ಶ್ರುತಿ ಸರಾಗವಾಗಲಿ ಹಾಡುವ ಮುನ್ನ ಜಗದ ನಿಂದೆ ಅಪಹಾಸ್ಯ ಗಳಿಗೆ ನೊಂದು ಅನುಮಾನಿಸದಿರುಜೀವಿಗಳ ಪ್ರೀತಿ ಬೆಸುಗೆ ಗಟ್ಟಿಯಾಗಲಿ ಕೂಡುವ ಮುನ್ನ ನೆರಳಿರದ ಹಾದಿಯಲಿ ಬದುಕಿನ ಬಂಡಿ ಸಾಗಿದೆ ಅನವರತಬಾಳಿನ ಕಹಿ ನೆನಪ ದಿನಗಳು ಮರೆಯಾಗಲಿ ಕಾಡುವ ಮುನ್ನ ವಿರಹ ದಳ್ಳುರಿಯಲಿ ನಿತ್ಯ ದಹಿಸುತಿವೆ ಪ್ರೇಮಿಗಳ ಉಸಿರುಅನುರಾಗ ಚುಂಬನಕೆ ಹೃದಯ ಹಗುರಾಗಲಿ ಬೇಡುವ ಮುನ್ನ ಕೋಶ ಕೀಟಕೆ ರೆಕ್ಕೆಗಳ ಹಚ್ಚಿ ಕೊಂಡು ಹಾರುವ ಆತುರಪ್ರಭೆಯ ಮೋಹ ಇರುಳ ಧ್ಯಾನ ದೂರಾಗಲಿ ಹೊರಡುವ ಮುನ್ನ *************************************************

ಗಝಲ್ Read Post »

ಕಾವ್ಯಯಾನ

ನನ್ನಮ್ಮ

ಕವಿತೆ ನನ್ನಮ್ಮ ಶೃತಿ ಎಸ್.ಗೌಡ ನನ್ನಮ್ಮ ಸೀತೆಯಲ್ಲ ಸಾವಿತ್ರಿಯಲ್ಲಕೈ ಹಿಡಿದ ಪತಿಯೊಡನೆವನವಾಸಕ್ಕೂ ಹೋಗಲಿಲ್ಲಅವನಿಗಾಗಿ ಯಮನನ್ನು ಅಡ್ಡಗಟ್ಟಲಿಲ್ಲ ಇದ್ದಲ್ಲಿಯೇ ವನವಾಸ ಮಾಡಿದವಳು ಕುಡಿದ ಮತ್ತಿನಲ್ಲಿ ನಡೆಯಲಾರದೆ ಎಡವಿ ಬಿದ್ದ ಅಪ್ಪನಿಗೆ ತನ್ನ ಹೆಗಲನ್ನು ಆಸರೆಯಾಗಿ ನೀಡಿದವಳು ನನ್ನಮ್ಮ ಆಸರೆ ಬಯಸಲಿಲ್ಲಸಂಸಾರದ ನೊಗ ಹೊತ್ತುನಮಗಾಸರೆಯಾದವಳುತಾನು ನಿಂತು ನಮ್ಮ ನಡೆಸಿತಾನು ಹಸಿದು ನಮಗುಣಿಸಿತನ್ನ ಕಣ್ಣುಗಳಲ್ಲಿಅವಳ ಕನಸುಗಳ ಕಂಡವಳುಸಂಸಾರದ ಹಾದಿಯಲ್ಲಿ ನಿಲ್ಲದೆ ನಡೆದವಳು ನನ್ನಮ್ಮ ಹೆಚ್ಚು ಕಲಿಯಲಿಲ್ಲಗುಡಿಗಳ ಗುಂಡಾರವ ಸುತ್ತಲಿಲ್ಲಸ್ವರ್ಗ ನರಕಗಳ ಕಲ್ಪನೆಯೂ ಅವಳಿಗಿಲ್ಲ ಇರುವಷ್ಟು ದಿನಬಾಳ ಕುಲುಮೆಯಲಿ ಬೆಂದವಳು ಕುಡಿತಕ್ಕೆ ಶರಣಾಗಿ ಬದುಕನ್ನೇ ಬಲಿ ಕೊಟ್ಟ ಅಪ್ಪನ ಕಂಡು ಸತ್ತು ಬದುಕಿದವಳುದೇವರು ಕೊಟ್ಟ ಆಯಸ್ಸುಮುಗಿಯುವ ಮುನ್ನವೇ ಬದುಕು ಭಾರವೆಂದುನೊಂದವಳು ******************

ನನ್ನಮ್ಮ Read Post »

ಅನುವಾದ

ಅನುವಾದ ಬರಹ ರಘುಪತಿ ಸಹಾಯ್ ಫಿರಾಖ್ ಗೋರಖ್ ಪುರಿ ಕವಿತೆ ರಘುಪತಿಸಹಾಯ್ ಫಿರಾಖ್ ಗೋರಖ್ಪುರಿ ಇವರು ಪ್ರಮುಖ ಉರ್ದುಕವಿಗಳು. ಸಾಹಿರ್ಲೂದಿಯಾನ್ವಿ,ಮಹಮ್ಮದ್ಇಕ್ಬಾಲ್‍‍ರಂತಹ ಅನೇಕ ಹೆಸರಾಂತ ಉರ್ದುಕವಿಗಳಿದ್ದ ಕಾಲದಲ್ಲಿಇವರುಉತ್ತಮಉರ್ದುಕವಿಗಳಾಗಿಪ್ರಸಿದ್ಧಿಪಡೆದರು. ಇವರ ಬೃಹತ್ಕವನಸಂಕಲನ ಗುಲ್-ಏ-ನಗ್ಮಾಕ್ಕೆ ಜ್ಞಾನಪೀಠಪ್ರಶಸ್ತಿಯುದೊರೆಯಿತು. ಇಲ್ಲಿಅನುವಾದಗೊಂಡ ಕವಿತೆಗಳು ಗಜಲುಗಳಂತೆ ಕಂಡರೂ ಗಜಲುಗಳಲ್ಲ. ಇವುಕಾವ್ಯಕಾರಣದಲ್ಲಿಬಂದವು ಕನ್ನಡಕ್ಕೆ ಅನುವಾದಿಸಿದವರು: ಆರ್.ವಿಜಯರಾಘವನ್ ಇಂದು ಸಹ ಪ್ರೀತಿಯ ಕಾರವಾನ್ ಇಂದೂ ಈಪ್ರೀತಿಯ ಕಾರವಾನ್ ಹಾದುಹೋಗುತ್ತಿದೆಈ ಮೈಲು ಮತ್ತು ಈ ಮೈಲಿಗಲ್ಲನ್ನು ಯಾವತ್ತಿನಂತೆ ನಿಮ್ಮ ದುಃಖ ಈ ಜಗತ್ತಿನಲ್ಲಿದ್ದ ಎಂದಿನ ದುಷ್ಟ ವಿಷಯವಾಗಿದೆನಮ್ಮ ಕಥೆಯನ್ನು ಇತರರು ಹೇಳುತ್ತಿದ್ದಾರೆಅದೇ ಮೊದಲಿನಂತೆ ಗುರಿಗಳುಧೂಳಿನಂತೆಹಾರಿಹಾರಿ ಹೋಗುತ್ತಲಿವೆಹಾದುಹೋಗುವಲೋಕದರೀತಿಯೂಮೊದಲಿನಂತೆ ಕತ್ತಲೆಯಲ್ಲಿಬೆಳಕಿನಲ್ಲಿಪ್ರೀತಿಏನನ್ನೂಕಾಣಲಿಲ್ಲಸಂಜೆಬೆಳಕಿನಪರಿಣಾಮವಿದೆಇಂದಿಗೂಮೊದಲಿನಂತೆ ಈ ಬದುಕಿನಲ್ಲಿ ಬದುಕ ಒಟ್ಟುಗೂಡಿಸುವಿಕೆ ಪರಿಣಾಮರಹಿತವಾಗಿದೆಭಾರದುಬಾರಿ ಮಧುಕುಡಿಕೆಗಳ ಕುರಿತ ಗೌಜುಗದ್ದಲವಿದೆ ಮೊದಲಿನಂತೆ ಸಾವಿರಸಾವಿರ ಹಿಂಸೆ ದಬಾವಣಿಕೆಯ ಕಾರ್ಯಗಳಮಾಡುಸಾವಿರಗಟ್ಟಲೆ ಬದ್ಧತೆಯ,ದಯೆಯ ಸತ್ಕಾರ್ಯಗಳಮಾಡುಗೆಳೆಯನೇ! ನಿನ್ನ ಕುರಿತ ಶಂಕೆ ಅನುಮಾನಗಳು ಉಳಿವವು ಮೊದಲಿನಂತೆ ಇಂದು, ಮತ್ತೆ, ಪ್ರೀತಿಬೇರ್ಪಟ್ಟಿದೆಎರಡುಲೋಕಗಳಿಂದಜಗತ್ತನ್ನುತೋಳುಗಳಲ್ಲಿಬಿಗಿದಪ್ಪಿದ್ದವಳುಇರುವಳೇಮೊದಲಿನಂತೆ ಖಿನ್ನತೆಗೆಸಂದ ಪ್ರೀತಿಇಂದಿಗೂಅತಿಖಿನ್ನತೆಗೆಒಳಗಾಗಿಲ್ಲಕಾಣದಂಥಸುಡುವಿಕೆಯಸಣ್ಣಪರಿಣಾಮವುಇದೆಮೊದಲಿನಂತೆ ಸಾಮೀಪ್ಯವುಕಡಿಮೆಯಿಲ್ಲ, ದೂರವಿರುವಿಕೆಯುಹೆಚ್ಚಿಲ್ಲಆದರೆಇಂದು, ಅನ್ಯೋನ್ಯತೆಯಅರ್ಥವಿರುವುದಾದರೂಎಲ್ಲಿಮೊದಲಿನಂತೆ ಸ್ಫಟಿಕಮಣಿಯಲ್ಲಿಅತಿಸೂಕ್ಷ್ಮಲೋಪವನುನೀನಗೆನೋಡಲುಸಾಧ್ಯಸ್ಫಟಿಕಮಣಿಯಕಲಾಕಾರನೇ, ಹೇಳು, ನನ್ನಹೃದಯವಿರುವುದೇಮೊದಲಿನಂತೆ ಒಮ್ಮೆಕಾಮಕ್ಕೆಅಜಾಗರೂಕತೆಯಿಂದಬದುಕನ್ನೊಪ್ಪಿಸಿದರೂಲಾಭನಷ್ಟದಸಮಸ್ಯೆಉಳಿದೇ ಇರುವುದುಮೊದಲಿನಂತೆ ಇಂದೂಕೊಲ್ಲುವಸೌಂದರ್ಯವಿರುವುದುಪ್ರೀತಿಬೇಟೆಯಾಡುವನೆಲದಲ್ಲಿತನ್ನ ಕಮಾನುಹುಬ್ಬನ್ನುಒಯ್ಯಲೊಯ್ಯುತ್ತಮೊದಲಿನಂತೆ ನಿಮ್ಮಪ್ರಕಾಂಡಪ್ರವಚನದಕಣ್ಣುಮಾತನಾಡಲುಪ್ರಾರಂಭಿಸಿತುಆಅಭಿವ್ಯಕ್ತಿಯಸೌಂದರ್ಯಮಾಂತ್ರಿಕತೆ ಈಗಲೂಇರುವವಾ ಮೊದಲಿನಂತೆ ಓಫಿರಾಕ್, ಸುಡುವಹೃದಯದಕಪ್ಪುವಿಧಿಯಂತಹಅದೃಷ್ಟವುಮಸುಕಾಗುವುದಿಲ್ಲಈದಿನಮೋಂಬತ್ತಿಯಮೇಲ್ಭಾಗದಲ್ಲಿಹೊಗೆಇದೆ, ಮೊದಲಿನಂತೆ.

Read Post »

ಅಂಕಣ ಸಂಗಾತಿ, ಸಂಪ್ರೋಕ್ಷಣ

ಅಂಕಣ ಬರಹ ಬಸ್ ಸ್ಟ್ಯಾಂಡೆನ್ನುವ ಮಾಯಾಲೋಕ ಚಲನೆ ಎನ್ನುವ ಪದದ ನಿಜವಾದ ಅರ್ಥವೇನೆಂದು ತಿಳಿಯಬೇಕಾದರೆ ಈ ಬಸ್ ಸ್ಟ್ಯಾಂಡಿನಲ್ಲಿ ಅರ್ಧ ಗಂಟೆ ಸುಮ್ಮನೆ ನಿಂತುಬಿಡಬೇಕು; ಅವಸರದಲ್ಲಿ ಅತ್ತಿತ್ತ ಓಡಾಡುತ್ತ ಬೋರ್ಡು ಹುಡುಕುವವರನ್ನು, ಕಂಟ್ರೋಲ್ ರೂಮಿನಿಂದ ಅಶರೀರವಾಣಿಯಂತೆ ಮೊಳಗುವ ಅನೌನ್ಸ್‌ಮೆಂಟಿಗೆ ಬ್ಯಾಗನ್ನೆತ್ತಿಕೊಂಡು ಬಸ್ಸಿನೆಡೆಗೆ ಓಡುವವರನ್ನು, ಒಂದು ನಿಮಿಷವೂ ಆಚೀಚೆಯಾಗದಂತೆ ಅದೆಲ್ಲಿಂದಲೋ ಓಡಿಬಂದು ಹೊರಡುತ್ತಿರುವ ಬಸ್ಸನ್ನು ಹತ್ತಿಕೊಳ್ಳುವವರನ್ನು ಸಹನೆಯಿಂದ ಗಮನಿಸಬೇಕು! ಬಸ್ಸಿನ ಹಾಗೂ ಅದರ ಚಲನೆಯ ಹೊರತಾಗಿ ಬೇರಾವ ವಿಷಯಗಳೂ ಆ ಕ್ಷಣದ ಅಲ್ಲಿನ ಬದುಕುಗಳ ಎಣಿಕೆಗೆ ಸಿಕ್ಕುವುದಿಲ್ಲ. ಭೂಮಿ ಸೂರ್ಯನನ್ನು ಪರಿಭ್ರಮಿಸುವ, ಇನ್ಯಾವುದೋ ಉಪಗ್ರಹವೊಂದು ಭೂಮಿಯನ್ನು ಸುತ್ತುತ್ತಿರುವ ಯಾವುದೇ ನಿರ್ಣಯಾತ್ಮಕ ತತ್ವಗಳಿಗೆ ಒಳಪಡದ ಸರಳವಾದ ಚಲನೆಯ ಸಿದ್ಧಾಂತವೊಂದು ಬಸ್ಸಿನ ಅಸ್ತಿತ್ವದೊಂದಿಗೆ ನಿರ್ಣಯಿಸಲ್ಪಡುತ್ತದೆ. ಬಸ್ಸು ಯಾವ ಸಮಯಕ್ಕೆ ಬಸ್ ಸ್ಟ್ಯಾಂಡನ್ನು ತಲುಪಿತು, ಅದರ ಬೋರ್ಡು ಯಾವಾಗ ಬದಲಾಯಿತು, ಅದರ ನಿರ್ಗಮನಕ್ಕೆ ನಿಗದಿಯಾದ ಅವಧಿಯೇನು ಹೀಗೆ ಸಮಯದ ಸುತ್ತ ಸುತ್ತುವ ಮಾಹಿತಿಗಳೇ ಅತ್ತಿತ್ತ ಸುಳಿದು ಚಲನೆಯ ದಿಕ್ಕುಗಳನ್ನು ನಿರ್ಧರಿಸುತ್ತಿರುತ್ತವೆ. ಅಂತಹ ನಿರ್ಣಾಯಕ ಹಂತದಲ್ಲಿ ಬಸ್ ಸ್ಟ್ಯಾಂಡೊಂದು ಪುಟ್ಟ ಗ್ರಹದಂತೆ ಗೋಚರವಾಗಿ, ತನ್ನ ನಿಯಮಗಳಿಗನುಸಾರವಾಗಿ ಬದುಕುಗಳ ಚಲನೆಯ ಬೋರ್ಡನ್ನು ಬದಲಾಯಿಸುತ್ತಿರುವಂತೆ ಭಾಸವಾಗುತ್ತದೆ.           ನಾನು ಬಸ್ಸಿಗಾಗಿ ಕಾಯುತ್ತ ನಿಂತಿರುತ್ತಿದ್ದ ಕಾಲದಲ್ಲಿ ಈ ಬಸ್ಸಿನ ಬೋರ್ಡುಗಳೆಡೆಗೆ ನನಗೊಂದು ವಿಚಿತ್ರವಾದ ಕುತೂಹಲವಿತ್ತು. ಬೋರ್ಡೇ ಇರದ ಬಸ್ಸೊಂದು ತುಂಬಾ ಸಮಯದಿಂದ ಸ್ಟ್ಯಾಂಡಿನಲ್ಲಿಯೇ ನಿಂತಿದೆಯೆಂದರೆ ಅದು ಡಿಪೋಗೆ ಹೋಗುವ ಬಸ್ಸು ಎಂದು ಅದ್ಹೇಗೋ ತೀರ್ಮಾನವಾಗಿ ಆ ಬಸ್ಸಿನ ನಂಬರನ್ನಾಗಲೀ, ಅದರ ಆಗುಹೋಗುಗಳನ್ನಾಗಲೀ ಯಾರೂ ಗಮನಿಸುತ್ತಲೇ ಇರಲಿಲ್ಲ; ಡ್ರೈವರೊಬ್ಬ ಆ ಬಸ್ಸಿನೆಡೆಗೆ ನಡೆದುಕೊಂಡು ಹೋಗುತ್ತಿದ್ದರೂ ಅಲ್ಲಿರುವ ಯಾರ ಗಮನವೂ ಅದರ ಕಡೆಗೆ ಹರಿಯುತ್ತಿರಲಿಲ್ಲ. ಅದೇ ಬೋರ್ಡು ಹಾಕುವವ ಬಸ್ಸಿನೆಡೆಗೆ ಚಲಿಸಿದಾಗ ಮಾತ್ರ ಅಲ್ಲಿರುವವರೆಲ್ಲರ ದೃಷ್ಟಿಯೂ ಅವನನ್ನೇ ಅನುಸರಿಸುತ್ತ ತೀಕ್ಷ್ಣವಾಗತೊಡಗುತ್ತಿತ್ತು. ಅಷ್ಟು ಹೊತ್ತು ಅಲ್ಲಿಯೇ ನಿಂತಿರುತ್ತಿದ್ದ ಬಸ್ಸಿನ ಅಸ್ತಿತ್ವಕ್ಕೊಂದು ಬೆಲೆಯೇ ಇಲ್ಲದಂತೆ ಭಾಸವಾಗಿ, ನಾಲ್ಕಾರು ಅಕ್ಷರಗಳ ಬೋರ್ಡೊಂದು ನಿಮಿಷಾರ್ಧದಲ್ಲಿ ಅದರ ಇರುವಿಕೆಯ ಸ್ವರೂಪವನ್ನು ಬದಲಾಯಿಸಿಬಿಡುವುದನ್ನು ನೋಡಿ ನನಗೆ ಆಶ್ಚರ್ಯವಾಗುತ್ತಿತ್ತು. ಈ ಬೋರ್ಡುಗಳೆಲ್ಲ ಅದ್ಯಾವ ಫ್ಯಾಕ್ಟರಿಯಲ್ಲಿ ತಯಾರಾಗಬಹುದು, ಅದರ ಮೇಲೆ ಅಕ್ಷರಗಳನ್ನು ಬರೆಯುವವ ಯಾವ ಊರಿನವನಾಗಿರಬಹುದು, ತಾನೇ ಬರೆದ ಬೋರ್ಡನ್ನು ಹೊತ್ತು ಹೊರಡಲು ರೆಡಿಯಾದ ಬಸ್ಸನ್ನೇರುವಾಗ ಅವನ ಮನಸ್ಸಿನ ಭಾವನೆಗಳೇನಿರಬಹುದು ಎನ್ನುವಂತಹ ವಿಚಿತ್ರವಾದ ಆಲೋಚನೆಗಳೂ ಆಗಾಗ ಸುಳಿಯುತ್ತಿದ್ದವು. ಕಂಟ್ರೋಲ್ ರೂಮಿನ ಪಕ್ಕ ಒಂದಕ್ಕೊಂದು ಅಂಟಿಕೊಂಡು ನಿಂತಿರುತ್ತಿದ್ದ ಬೋರ್ಡುಗಳಲ್ಲಿ ತನಗೆ ಬೇಕಾಗಿದ್ದನ್ನು ಮಾತ್ರ ಎತ್ತಿಕೊಂಡು ವಿಚಿತ್ರವಾದ ಗತ್ತಿನಲ್ಲಿ ಓಡಾಡುತ್ತಿದ್ದ ಬೋರ್ಡು ಹಾಕುವವನೇ ಸ್ಟ್ಯಾಂಡಿನಲ್ಲಿ ಕಾಯುತ್ತಿರುವವರೆಲ್ಲರ ಬದುಕಿನ ಚಲನೆಯನ್ನು ನಿರ್ಧರಿಸುತ್ತಿರುವಂತೆ ಭಾಸವಾಗುತ್ತಿತ್ತು.           ಈ ಕಂಟ್ರೋಲ್ ರೂಮ್ ಎನ್ನುವುದೊಂದು ಮಾಯಾಲೋಕದ ಕಲ್ಪನೆಯನ್ನು ಕಣ್ಣೆದುರು ತೆರೆದಿಡುವ ಜಾಗ. ಅಸಾಧಾರಣವಾದ ಲವಲವಿಕೆಯ ಆ ಸ್ಥಳದಲ್ಲಿ ನಡೆಯುವ ಮಾತುಕತೆಗಳು, ಅದ್ಯಾವುದೋ ಗುರುತು-ಪರಿಚಯಗಳಿಲ್ಲದ ಊರಿನಲ್ಲಿ ಸಂಜೆಯ ಹೊತ್ತು ನಡೆದ ಘಟನೆಗಳನ್ನು ತಮ್ಮದಾಗಿಸಿಕೊಂಡ ಜೋಕುಗಳು, ಬಸ್ಸಿನ ಆಗಮನವನ್ನೇ ಕಾಯುತ್ತಿರುವಂತೆ ತೋರುವ ಬಾಯಿಪಾಠದಂತಹ ಅನೌನ್ಸ್‌ಮೆಂಟುಗಳು ಎಲ್ಲವೂ ಸೇರಿಕೊಂಡು ಅಲ್ಲೊಂದು ವಿಶಿಷ್ಟವಾದ ಜೀವಂತಿಕೆಯ ಸಂವಹನವೊಂದು ಪ್ರತಿನಿಮಿಷವೂ ಹುಟ್ಟಿಕೊಳ್ಳುತ್ತಿರುತ್ತದೆ. ರೂಮಿನ ಒಳಹೋಗುತ್ತಿರುವ ಡ್ರೈವರಿನೊಂದಿಗೆ ಹೊರಬರುತ್ತಿರುವ ಕಂಡಕ್ಟರ್ ಒಬ್ಬ ಮುಖಾಮುಖಿಯಾಗಿ, ಬಾಗಿಲಿನಲ್ಲಿ ನಗುವೊಂದರ ವಿನಿಮಯವಾಗಿ, ಯಾರೋ ನಿರ್ಧರಿಸಿದ ಚಲನೆಯೊಂದು ಪರಿಚಯವೇ ಇಲ್ಲದ ಇಬ್ಬರ ನಗುವಿನಲ್ಲಿ ಸಂಧಿಸುತ್ತಿರುವಂತೆ ಅನ್ನಿಸುತ್ತದೆ. ಬೆಂಚಿನ ಮೇಲೆ ಬಸ್ಸಿಗಾಗಿ ಕಾಯುತ್ತ ಕುಳಿತಿದ್ದ ಶಾಲೆಗೆ ಹೋಗುವ ಮಗುವೊಂದು ಎದ್ದುಬಂದು, ಕಂಟ್ರೋಲ್ ರೂಮಿನ ಸರಳುಗಳನ್ನು ಹಿಡಿದುಕೊಂಡು ತಲೆ ಮೇಲೆತ್ತಿ ಬಸ್ಸಿನ ನಂಬರನ್ನು ವಿಚಾರಿಸುವಾಗಲೆಲ್ಲ ಕಾರಣವಿಲ್ಲದೆ ಆ ಮಗುವಿನ ಮೇಲೊಂದು ಪ್ರೀತಿ ಹುಟ್ಟಿಕೊಳ್ಳುತ್ತದೆ. ಪಡ್ಡೆ ಹುಡುಗರೆಡೆಗೆ ಒಂದು ಅಸಡ್ಡೆಯನ್ನು ತೋರಿಸುವ ಕಂಟ್ರೋಲ್ ರೂಮಿನ ಯಜಮಾನ ಮಗುವಿನ ಪ್ರಶ್ನೆಗೆ ನಗುನಗುತ್ತ ಉತ್ತರಿಸುವಾಗ, ಸರಳುಗಳ ಒಳಗೆ ಕುಳಿತೇ ಇರುವ ಮಾನವೀಯ ಧ್ವನಿಯೊಂದು ಸರಳುಗಳಾಚೆ ಹರಿದು ಕಾಯುವಿಕೆಯ ಅಸಹನೆಗಳೆಲ್ಲವನ್ನೂ ಕಡಿಮೆ ಮಾಡುತ್ತದೆ. ಬಾಗಿಲನ್ನೇ ಮುಚ್ಚದ ಕಂಟ್ರೋಲ್ ರೂಮಿನ ಗೋಡೆಯ ಮೇಲಿನ ದೊಡ್ಡ ಗಡಿಯಾರವೊಂದು ಬಾಗಿಲಿನಲ್ಲಿ, ಮೈಕಿನಲ್ಲಿ, ಸರಳುಗಳ ಸಂದಿಗಳಲ್ಲಿ ಸಂಧಿಸುವ ಸಂವಹನಗಳ ಸಮಯವನ್ನು ತನ್ನದಾಗಿಸಿಕೊಳ್ಳುತ್ತ ಚಲಿಸುತ್ತಲೇ ಇರುತ್ತದೆ.           ಬಸ್ ಸ್ಟ್ಯಾಂಡೊಂದು ತನ್ನೊಳಗಿನ ಚುರುಕುತನವನ್ನು ಕಂಪೌಂಡಿನಾಚೆಯೂ ವಿಸ್ತರಿಸಿಕೊಳ್ಳುವ ರೀತಿ ಅಚ್ಚರಿ ಹುಟ್ಟಿಸುವಂಥದ್ದು. ನಾಲ್ಕೇ ಅಡಿಗಳ ಜಾಗದಲ್ಲಿ ಅಕ್ಕಪಕ್ಕದವರಿಗೆ ಒಂದು ಹನಿಯೂ ಸಿಡಿಯದಂತೆ ಎಳನೀರು ಕತ್ತರಿಸುವವನ ಪಕ್ಕದ ಮೂರಡಿಯಲ್ಲಿ ಹೂ ಮಾರುವವನ ಬುಟ್ಟಿ, ಹಣ್ಣಿನ ಅಂಗಡಿಯೊಂದಿಗೆ ಅಂಟಿಕೊಂಡಂತೆ ಕಾಣುವ ಜ್ಯೂಸ್ ಪಾರ್ಲರು, ಜೊತೆಗೊಂದು ಬೀಡಾ ಅಂಗಡಿಯ ರೇಡಿಯೋ ಸೌಂಡು, ಸಂಜೆಯಾಗುತ್ತಿದ್ದಂತೆ ಬೇಕರಿಯ ಗಾಜಿನ ಬಾಕ್ಸುಗಳ ಮೇಲೆ ಹಾಜರಾಗುವ ಬೋಂಡಾ-ಬಜ್ಜಿಗಳೆಲ್ಲವೂ ಬಸ್ ಸ್ಟ್ಯಾಂಡಿನ ಲೋಕದೊಂದಿಗೆ ಒಂದಾಗಿಹೋಗಿ ಸೌಂದರ್ಯಪ್ರಜ್ಞೆಯ ಹೊಸದೊಂದು ಪರಿಕಲ್ಪನೆಯನ್ನು ಹುಟ್ಟುಹಾಕುತ್ತವೆ. ಬಸ್ಸಿನ ಓಡಾಟದಿಂದಾಗಿ ನೆಲಬಿಟ್ಟು ಮೇಲೆದ್ದ ಬೇಸಿಗೆಯ ಧೂಳಾಗಲೀ, ಮಳೆಗಾಲದ ರಾಡಿಯಾಗಲೀ, ಬೇಕರಿಯ ಚಹಾದ ಕಪ್ಪನ್ನು ಮುತ್ತಿಕೊಳ್ಳುವ ನೊಣಗಳಾಗಲೀ ಆ ಸೌಂದರ್ಯದ ಭಾವವನ್ನು ಕೊಂಚವೂ ಅಲ್ಲಾಡಿಸುವುದಿಲ್ಲ. ಬೇಕರಿಯೆದುರು ನಿಂತಿರುವ ಕಾಲೇಜು ಹುಡುಗರ ಗ್ಯಾಂಗೊಂದು ಜ್ಯೂಸು ಕುಡಿಯುತ್ತಿರುವ ಹುಡುಗಿಯರೆಡೆಗೆ ಕಳ್ಳದೃಷ್ಟಿ ಬೀರುವ ಅಪ್ರತಿಮ ನೋಟಕ್ಕೆ ಸಾಲುಸಾಲು ಅಂಗಡಿಗಳ ಪಕ್ಕದಲ್ಲಿ ನಿಧಾನವಾಗಿ ಚಲಿಸುವ ಬಸ್ಸು ಸಾಕ್ಷಿಯಾಗುತ್ತದೆ. ಆ ಸಾಲು ಅಂಗಡಿಗಳ ನಡುವೆಯೇ ಅಲ್ಲೊಂದು ಇಲ್ಲೊಂದು ಪ್ರೇಮವೂ ಮೊಳಕೆಯೊಡೆದು ಕಳ್ಳಹೆಜ್ಜೆಗಳನ್ನಿಡುತ್ತ ಬಸ್ ಸ್ಟ್ಯಾಂಡಿನೆಡೆಗೆ ಚಲಿಸುತ್ತದೆ. ಹಾಗೆ ಚಿಗುರಿದ ಒಲವೊಂದು ಅದೇ ಬಸ್ ಸ್ಟ್ಯಾಂಡಿನ ಬೆಂಚುಗಳ ಮೇಲೆ ಬೆಳೆದು, ಬದಲಾದ ಬೋರ್ಡಿನ ಬಸ್ಸನ್ನೇರಿ ತಂಟೆ-ತಕರಾರುಗಳಿಲ್ಲದೆ ಊರು ಸೇರಿ ಬೇರೂರುತ್ತದೆ.           ಈ ಬಸ್ ಸ್ಟ್ಯಾಂಡುಗಳಲ್ಲಿ ಹುಟ್ಟಿಕೊಳ್ಳುವ ಅನುಬಂಧಗಳ ಬಗ್ಗೆ ವಿಚಿತ್ರವಾದ ಆಸಕ್ತಿಯೊಂದು ನನ್ನಲ್ಲಿ ಈಗಲೂ ಉಳಿದುಕೊಂಡಿದೆ. ಸ್ಟ್ಯಾಂಡಿಗೆ ಬಂದ ಪ್ರತಿಯೊಂದು ವಿದ್ಯಾರ್ಥಿಯನ್ನೂ ಸಮಯಕ್ಕೆ ಸರಿಯಾಗಿ ಕಾಲೇಜು ತಲುಪಿಸುವುದು ತಮ್ಮ ಗುರುತರವಾದ ಜವಾಬ್ದಾರಿಯೆನ್ನುವಂತೆ ಹಾಜರಾಗುತ್ತಿದ್ದ ಸಿಟಿ ಬಸ್ಸಿನ ಡ್ರೈವರು-ಕಂಡಕ್ಟರುಗಳನ್ನು ಕಂಡಾಗ ಆಗುತ್ತಿದ್ದ ನೆಮ್ಮದಿ-ಸಮಾಧಾನಗಳ ಅನುಭವವನ್ನು ಜಗತ್ತಿನ ಬೇರಾವ ಸಂಗತಿಯೂ ದೊರಕಿಸಿಕೊಟ್ಟ ನೆನಪಿಲ್ಲ. ಬಸ್ಸಿಗಾಗಿ ಕಾಯುತ್ತಿದ್ದ ಸಮಯದಲ್ಲಿ ಡಿಪೋಗೆ ಹೋಗಲೆಂದು ನಿಂತಿರುತ್ತಿದ್ದ ಖಾಲಿ ಬಸ್ಸಿನೊಳಗೆ ಕುಳಿತು, ಬೇರೆ ಕಾಲೇಜಿನ ಹುಡುಗಿಯರೊಂದಿಗೆ ಮಾಡುತ್ತಿದ್ದ ಕಾಲಕ್ಷೇಪದ ಮಾತುಕತೆಯ ಭಾಗವಾಗುತ್ತಿದ್ದ ಹುಡುಗರ ಚಹರೆಗಳು ನೆನಪಿನಿಂದ ಮರೆಯಾಗುವುದಿಲ್ಲ. ಆ ಗ್ಯಾಂಗಿನಲ್ಲಿದ್ದ ಹುಡುಗನೊಬ್ಬನ ಮೇಲೆ ಚಿಕ್ಕದೊಂದು ಪ್ರೇಮವೂ ಹುಟ್ಟಿ, ಆತನ ಬಸ್ಸು ಹೊರಟುಹೋಗುವ ಸಮಯದಲ್ಲಿ ಕದ್ದುನೋಡುತ್ತಿದ್ದಾಗ, ಅಚಾನಕ್ಕಾಗಿ ಆತನೂ ತಿರುಗಿನೋಡಿ ಸೃಷ್ಟಿಯಾಗುತ್ತಿದ್ದ ನೈಜವಾದ ರೋಮಾಂಚಕ ದೃಶ್ಯವೊಂದು ಯಾವ ಸಿನೆಮಾದಲ್ಲಿಯೂ ಕಾಣಿಸಿಕೊಂಡಿಲ್ಲ. ಹೊಟೆಲಿನ  ಎಸಿ ರೂಮಿನಲ್ಲಿ ಕುಳಿತು ದೋಸೆ ತಿನ್ನುವಾಗಲೆಲ್ಲ ಬಸ್ ಸ್ಟ್ಯಾಂಡಿನ ಕ್ಯಾಂಟೀನಿನಲ್ಲಿ ಮಸಾಲೆದೋಸೆ ತಿನ್ನುವ ಆಸೆಯೊಂದು ಆಸೆಯಾಗಿಯೇ ಉಳಿದುಹೋದದ್ದು ನೆನಪಾಗಿ, ತಿನ್ನುತ್ತಿರುವ ದೋಸೆಯ ರುಚಿ ಹೆಚ್ಚಿದಂತೆ ಅನ್ನಿಸುವುದೂ ಸುಳ್ಳಲ್ಲ. ಪ್ರತಿದಿನ ಬೆಳಗ್ಗೆ ರಸ್ತೆಯಲ್ಲಿ ತರಕಾರಿ ಮಾರುವವನ ಧ್ವನಿವರ್ಧಕದಲ್ಲಿ ತರಕಾರಿಯ ಹೆಸರುಗಳನ್ನು ಕೇಳುವಾಗಲೆಲ್ಲ, ಕಂಟ್ರೋಲ್ ರೂಮಿನ ಮೈಕಿನಿಂದ ಹೊರಬರುತ್ತಿದ್ದ ಊರಿನ ಹೆಸರುಗಳೆಲ್ಲ ಒಂದೊಂದಾಗಿ ನೆನಪಾಗುತ್ತವೆ. ಆ ಹೆಸರುಗಳನ್ನು ಹೊತ್ತ ಬೋರ್ಡುಗಳೆಲ್ಲ ಡಿಪೋದಿಂದ ಸ್ಟ್ಯಾಂಡಿಗೆ ಬರುವ ಫಸ್ಟ್ ಬಸ್ಸುಗಳಿಗಾಗಿ ಕಾಯುತ್ತಿರಬಹುದು ಎನ್ನುವ ಯೋಚನೆಯೊಂದು ಹಾದುಹೋಗಿ, ಮಾಯಾಲೋಕದಂತಹ ಬಸ್ ಸ್ಟ್ಯಾಂಡಿನ ಸಹಜಸುಂದರ ನೆನಪನ್ನು ನನ್ನದಾಗಿಸಿಕೊಳ್ಳುತ್ತೇನೆ. ************************************************* ಇದು ಈಅಂಕಣದ ಕೊನೆಯ ಕಂತು – ಅಂಜನಾ ಹೆಗಡೆ ಮೂಲತ: ಉತ್ತರ ಕನ್ನಡದವರಾದ ಅಂಜನಾ ಹೆಗಡೆಯವರು ಸದ್ಯ ಬೆಂಗಳೂರಲ್ಲಿ ನೆಲೆಸಿರುತ್ತಾರೆ. ‘ಕಾಡ ಕತ್ತಲೆಯ ಮೌನ ಮಾತುಗಳು’ ಇವರು ಪ್ರಕಟಿಸಿದ ಕವನಸಂಕಲನ.ಓದು ಬರಹದ ಜೊತೆಗೆ ಗಾರ್ಡನಿಂಗ್ ಇವರ ನೆಚ್ಚಿನ ಹವ್ಯಾಸ

Read Post »

ಅಂಕಣ ಸಂಗಾತಿ, ಮೂರನೇ ಆಯಾಮ

ಅಂಕಣ ಬರಹ ಹಲವು ಬಣ್ಣಗಳನ್ನು ಹೊತ್ತ ಭಾವನೆಗಳ ಕೋಲಾಜ್ ಆಕಾಶಕ್ಕೆ ಹಲವು ಬಣ್ಣಗಳು (ಗಜಲ್ ಸಂಕಲನ)ಕವಿ- ಸಿದ್ಧರಾಮ ಹೊನ್ಕಲ್ಬೆಲೆ-೧೩೦/-ಪ್ರಕಾಶನ- ಸಿದ್ಧಾರ್ಥ ಎಂಟರ್‍ಪ್ರೈಸಸ್              ಇಲ್ಲಿ ಕತ್ತಲೆ ಕಳೆದು ಬೆಳಕು ಮೂಡಿಸಿದವರೆ ಸಂತ ಸೂಫಿಗಳು ಬಸವಾದಿ ಶರಣರು ಸಾಕಿ ಎನ್ನುತ್ತ ತಮ್ಮ ನೆಲದ ಗಟ್ಟಿ ದನಿಗಳನ್ನು ಉಲ್ಲೇಖಿಸಿ ಗಜಲ್‌ಲೋಕಕ್ಕೆ ಬಂದಿರುವ ಕವಿ ಸಿದ್ಧರಾಮ ಹೊನ್ಕಲ್ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಾ ಹಳಬರು. ಕಥೆ, ಕವನ, ಪ್ರವಾಸ ಕಥನ, ಪ್ರಬಂಧಗಳು ಹೀಗೆ ಹತ್ತಾರು ಪ್ರಕಾರಗಳಲ್ಲಿ ಕೈಯಾಡಿಸಿರುವ ಸಿದ್ಧರಾಮ ಹೊನ್ಕಲ್ ತಮ್ಮದೇ ನೆಲದ ಗಜಲ್‌ನ್ನು ಆತುಕೊಳ್ಳಲು ಇಷ್ಟು ತಡಮಾಡಿದ್ದೇಕೆ ಎಂದು ನಾನು ಬಹಳ ಸಲ ಯೋಚಿಸಿದ್ದೇನೆ. ಉತ್ತರ ಕರ್ನಾಟಕದ ಮಣ್ಣಿನಲ್ಲೇ ಹಾಸಿಕೊಂಡಿರುವ ಗಜಲ್‌ಗೆ  ಒಲಿಯದವರೇ ಇಲ್ಲ. ಗಜಲ್‌ನ ಶಕ್ತಿಯೇ ಅಂತಹುದ್ದು. ಗಜಲ್‌ನ ಜೀವನ ಪ್ರೀತಿಯೇ ಹಾಗೆ. ಎಲ್ಲವನ್ನೂ ಎಲ್ಲರನ್ನೂ ಒಳಗೊಳ್ಳುವ ಸಮಷ್ಠಿ ಅದು. ಜಿಂಕೆಯ ಆರ್ತನಾದದ, ಮನದ ಮಾತುಗಳನ್ನು ನವಿರಾಗಿ ಹೇಳುವ, ಗೇಯತೆಯೊಂದಿಗೆ ಸಕಲರನ್ನು ಸೆಳೆದಿಟ್ಟುಕೊಳ್ಳುವ ಗಜಲ್ ಎನ್ನುವ ಮೋಹಪಾಶ ಹಾಗೆ ಯಾರನ್ನೂ ಬಿಡುವುದಿಲ್ಲ. ಇಲ್ಲಿ ಸಿದ್ಧರಾಮ ಹೊನ್ಕಲ್ ಆಕಾಶದ ಹಲವು ಬಣ್ಣಗಳನ್ನು ತಮ್ಮ ಪುಸ್ತಕದಲ್ಲಿ ಹಿಡಿದಿಟ್ಟುಕೊಂಡು ನಮ್ಮೆದುರಿಗೆ ನಿಂತಿದ್ದಾರೆ. ಒಂದು ಹಂತಕೆ ಬರುವವರೆಗೆ ಯಾರೂ ಗುರ್ತಿಸುವುದಿಲ್ಲಹಾಗಾಗಿ ಯಾರ ಮೆಚ್ಚುಗೆಗಾಗಿ ಕಾಯಬೇಡಎಂದು ತಮಗೆ ತಾವೇ ಹೇಳಿಕೊಂಡಂತೆ ಗಜಲ್ ಲೋಕದಲ್ಲಿ ಗುರುತಿಸಿಕೊಳ್ಳುವುದು ಅಷ್ಟೇನು ಸುಲಭದ್ದಾಗಿರಲಿಲ್ಲ ಎನ್ನುವ ವೈಯಕ್ತಿಕ ಮಾತಿನ ಜೊತೆಗೇ ಸಾಮಾಜಿಕ ಸತ್ಯವೊಂದನ್ನು ನಾಜೂಕಾಗಿ ಹೇಳಿಬಿಡುತ್ತಾರೆ. ಯಾವುದೇ ಒಂದು ಕ್ಷೇತ್ರವಿರಲಿ ಆರಂಭದಲ್ಲಿ ಯಾರು ಗುರುತಿಸುತ್ತಾರೆ ಹೇಳಿ? ಅದು ಸಾಹಿತ್ಯ ಕ್ಷೇತ್ರವಿರಬಹುದು, ಕ್ರೀಡೆಯಾಗಿರಬಹುದು ಅಥವಾ ಇನ್ಯಾವುದೇ ವಲಯದಲ್ಲಾಗಿರಬಹುದು. ಒಂದು ವ್ಯಕ್ತಿಯನ್ನು ಗುರುತಿಸಲು ಹಲವಾರು ವರ್ಷಗಳ ಕಾಲ ಕಾಯಬೇಕು. ಒಂದು ಹಂತಕ್ಕೆ ಬಂದಮೇಲೆ ತಾನೇ ತಾನಾಗಿ ಎಲ್ಲರಿಂದ ಗುರುತಿಸಲ್ಪಟ್ಟರೂ ಆರಂಭದಲ್ಲಿ ಮೂಲೆಗುಂಪಾಗುವುದು ಸಹಜ. ಹೀಗಾಗಿ ಯಾರ ಮೆಚ್ಚುಗೆಗಾಗಿ ಕಾಯುವ ಅಗತ್ಯವಿಲ್ಲ. ನಮ್ಮ ಆತ್ಮಬಲವೇ ನಮ್ಮನ್ನು ಕಾಪಾಡಬೇಕು ಎಂಬ ಮಾತು ಎಲ್ಲರಿಗೂ ಅನ್ವಯಿಸುವ ಮಾತು.                   ಗಜಲ್ ಹಾಗೆ ಎಲ್ಲ ಭಾವಗಳನ್ನು ತನ್ನೊಳಗೆ ಬಿಟ್ಟುಕೊಳ್ಳುವುದಿಲ್ಲ. ಅದಕ್ಕೆ ಅದರದ್ದೇ ಆದ ಹತ್ತಾರು ನಿಯಮಗಳಿವೆ. ತನ್ನದೇ ಆದ ಸಿದ್ಧ ಮಾದರಿಯ ಭಾವಗಳಿವೆ. ಪ್ರೀತಿ ಪ್ರೇಮ ಕ್ಕೆ ಒಗ್ಗಿಕೊಳ್ಳುವ ಗಜಲ್ ಅದಕ್ಕಿಂತ ವಿರಹಕ್ಕೆ ಹೆಚ್ಚು ಹತ್ತಿರವಾಗುತ್ತದೆ. ಹಾಗೆಂದು ತರ್ಕಕ್ಕೆ, ಆಧ್ಯಾತ್ಮಿಕಕ್ಕೆ ಗಜಲ್ ಒಗ್ಗುವುದಿಲ್ಲ ಎಂದಲ್ಲ. ಗಜಲ್‌ನ ಮೂಲವೇ ಅಲ್ಲಿದೆ. ಪ್ರೇಮದೊಳಗಿನ ತಾರ್ಕಿಕತೆಗೆ ಹಾಗೂ ಪ್ರೇಮದೊಳಗಿನ ಆಧ್ಯಾತ್ಮಿಕತೆಗೆ ಗಜಲ್‌ನ ಪೂರ್ವಸೂರಿಗಳು ಹೆಚ್ಚು ಒತ್ತು ನೀಡಿದ್ದನ್ನು ಗಮನಿಸಬೇಕು. ಪ್ರೇಮದ ಕೊನೆಯ ಗುರಿಯೇ ಆಧ್ಯಾತ್ಮ ಎಂಬುದನ್ನು ಮರೆಯುವಂತಿಲ್ಲ. ಹಾಗೆಂದು ಗಜಲ್ ಸಾಮಾಜಿಕ ಕಳಕಳಿಯನ್ನು ಬೇಡ ಎನ್ನುವುದೇ? ಖಂಡಿತಾ ಇಲ್ಲ. ಹಿತವಾದ ಮಾತಿನ ಎಲ್ಲವನ್ನೂ ಗಜಲ್ ಅಪ್ಪಿಕೊಳ್ಳುತ್ತದೆ. ಅದು ಸಾಮಾಜಿಕ ಅಸಮಾನತೆ ಇರಲಿ, ಪರಿಸರ ರಕ್ಷಣೆ ಇರಲಿ ಎಲ್ಲವೂ ಗಜಲ್‌ಗೆ ಸಮ್ಮತವೇ.ಸಸಿಯೊಂದು ಹಚ್ಚಿದರೆ ತಾನೆ ಬೆಳೆದು ಹೆಮ್ಮರವಾಗಿ ಹೂ ಹಣ್ಣು ಕೊಡುವುದುಹಚ್ಚುವ ಮುಂಚೆ ಭೂಮಿಯ ಹಸನಾಗಿಸುವುದು ನೀ ಕಲಿ ಗೆಳೆಯಾಎನ್ನುತ್ತಾರೆ ಕವಿ. ಸಸಿಯನ್ನು ನೆಟ್ಟರೆ ಮಾತ್ರ ಭೂಮಿ ಹಸನಾಗುವ ಮಾತು ಎಷ್ಟು ಮಾರ್ಮಿಕವಾಗಿ ಇಲ್ಲಿ ಮೂಡಿದೆ. ಸಸಿಯನ್ನೇ ನೆಡದೇ ಹಣ್ಣು ಬೇಕು ಹೂವು ಬೇಕು ಎಂದರೆ ಎಲ್ಲಿಂದ ತರಲಾದೀತು? ಕೃಷಿಯನ್ನು ಕೀಳಾಗಿ ಕಾಣುವ ಎಲ್ಲರ ಕುರಿತಾಗಿ ಈ ಮಾತು ಅನ್ವಯಿಸುತ್ತದೆ.  ಕವಿಗೆ ಸಮಾಜದ ರೀತಿ ನೀತಿಗಳು ಗೊತ್ತಿದೆ. ಇಲ್ಲಿ ಎಲ್ಲವೂ ನಾವು ಅಂದುಕೊಂಡಂತೆ ಆಗುವುದಿಲ್ಲ. ಯಾರೋ ಬಂದು ನಮ್ಮ ಒಳ್ಳೆಯ ಕೆಲಸಕ್ಕೆ ಬೆನ್ನು ತಟ್ಟುತ್ತಾರೆ ಎಂಬ ಭ್ರಮೆಯಲ್ಲಿ ಇರಬೇಕಿಲ್ಲ. ಯಾರೂ ನಮ್ಮನ್ನು ಪ್ರೋತ್ಸಾಹಿಸುವುದಿಲ್ಲ. ಯಾರಾದರೂ ಸ್ವಲ್ಪ ಬೆಳವಣಿಗೆ ಕಂಡರೆ ಅವರ ಕಾಲು ಹಿಡಿದು ಎಳೆಯುವ ಮನೋಭಾವವೇ ಈ ಸಮಾಜದಲ್ಲಿ ತುಂಬಿಕೊಂಡಿದೆ. ಹೀಗಾಗಿಯೇ ಕವಿ,ಸಹಜ ಬೆನ್ನು ತಟ್ಟಿ ನಗು ಅರಳಿಸುವವರು ಜಗದಲ್ಲಿಲ್ಲಎಲ್ಲರೂ ಮಾನವೀಯರಿದ್ದಾರೆಂಬ ಭ್ರಮೆ ನಿನಗೆ ಬೇಡ ಗೆಳೆಯಎನ್ನುತ್ತಾರೆ. ನಮ್ಮ ಬೆನ್ನು ತಟ್ಟಿ ನಗು ಅರಳಿಸುವವರು ಸಿಗುವುದಿಲ್ಲ. ಕೇವಲ ನೋವು ನೀಡಿ ಸಂಭ್ರಮಿಸುವವರು ಮಾತ್ರ ನಮ್ಮ ಸುತ್ತಮುತ್ತ ತುಂಬಿಕೊಂಡಿದ್ದಾರೆ. ನಮ್ಮ ಸಮಾಜ ಜಾತಿ, ಧರ್ಮ ಮುಂತಾದ ಬೇಡದ ವ್ಯಾಧಿಯನ್ನು ತಲೆಯಲ್ಲಿ ತುಂಬಿಕೊಂಡು ನರಳುತ್ತಿದೆ.ಈ ಭೂಮಿಯಲ್ಲಿ ಗೀತೆ ಕುರಾನ್ ಬೈಬಲ್ ಗುರುವಾಣಿ ಹೀಗೆ ಏನೆಲ್ಲ ಒಳ್ಳೆಯದು ಬಿತ್ತಿಹರುಈ ಸಮಾನತೆಯ ಸಾಮರಸ್ಯ ಹೊಸ ಹೂವು ಏಕೆ ಮತ್ತೆ ಮತ್ತೆ ಅರಳುತ್ತಿಲ್ಲ ಸಾಕಿ ಪ್ರತಿ ಧರ್ಮದಲ್ಲೂ ಮನುಷ್ಯತ್ವವನ್ನೇ ಬೋಧಿಸಿದ್ದಾರೆ. ಮಾನವನ ಏಳ್ಗೆ ಇರುವುದೇ ಪ್ರೀತಿ ಮ,ತ್ತು ಸಹಬಾಳ್ವೆಯಲ್ಲಿ ಎಂದಿದ್ದರೂ ನಾವು ಮಾತ್ರ ಜಾತಿ ಧರ್ಮದ ಹೆಸರು ಹೇಳಿಕೊಂಡು ಕಚ್ಚಾಡುತ್ತಿದ್ದೇವೆ. ಗೀತೆ ಇರಲಿ, ಕುರಾನ್ ಇರಲಿ, ಬೈಬಲ್ ಇರಲಿ ಅಥವಾ ಗುರುವಾಣಿಯೇ ಇರಲಿ. ಎಲ್ಲರೂ ಪ್ರೀತಿಯೇ ಜಗದಲ್ಲಿ ಸರ್ವೋತ್ತಮ ಎಂದರೂ ಅದನ್ನು ಯಾರೂ ಆಚರಣೆಗೆ ತರುತ್ತಿಲ್ಲ. ನಾವು ಗೀತೆಯನ್ನು ನಂಬುತ್ತೇವೆ. ಅಂತೆಯೇ ಕುರಾನ್ ಹಾಗು ಬೈಬಲ್‌ನ್ನೂ ಕೂಡ. ಗೀತೆ, ಕುರಾನ್ ಬೈಬಲ್‌ನಲ್ಲಿರುವುದೇ ಪರಮಸತ್ಯ ಎಂದು  ಭಾವಿಸುತ್ತ ಅದನ್ನು ಆಚರಣೆಗೆ ತರುತ್ತಿರುವುದಾಗಿ ಭ್ರಮೆಗೊಳಗಾಗಿದ್ದೇವೆ. ಆದರೆ ವಾಸ್ತವದಲ್ಲಿ ನಾವ್ಯಾರೂ ನಮ್ಮ ಧರ್ಮಗ್ರಂಥಗಳನ್ನು ತಿಳಿದೇ ಇಲ್ಲ.  ಅದು ಬೋಧಿಸಿದ ಪ್ರೇಮವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡೇ ಇಲ್ಲ ಎಂಬ ವಿಷಾದ ಕವಿಗಿದೆ. ಸತ್ಯವಾಡಿದ ಹರಿಶ್ಚಂದ್ರ ಚಂದ್ರಮತಿಯನ್ನ ಮಾರಿಕೊಂಡದ್ದು, ಧರ್ಮರಾಯ ಧರ್ಮವನ್ನು ಉಳಿಸಲು ಹೋಗಿ ದ್ರೌಪದಿಯನ್ನೇ ಪಣಕ್ಕಿಟ್ಟು ಕಳೆದುಕೊಂಡಿದ್ದನ್ನು ಹೇಳುತ್ತ ಸಮಾಜದಲ್ಲಿ ಯಾರಂತೆ ಇರಬೇಕು ಎಂದು ಕೇಳುತ್ತಾರೆ. ಧರ್ಮ ಎಂದರೆ ಎಲ್ಲವನ್ನೂ ಒಳಗೊಂಡದ್ದು ಎನ್ನುವ ವಿಶ್ವ ಕುಟುಂಬದ ಮಾತು ಇಲ್ಲಿ ಕೇಳಿಸುತ್ತದೆ. ಹೀಗಾಗಿಯೇ ಜಾತಿ ಧರ್ಮದ ಹೆಸರಿನಲ್ಲಿ ‘ಮಾತು ಮಾತಲ್ಲಿ ಕೊಳ್ಳಿ ಇಟ್ಟು ಮನಸ್ಸು ಮುರಿಯುವುದು ಬೇಕಿರಲಿಲ್ಲ ಈಗ’ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.ಕೆಲವರಿಗೆ ಜಾತಿಯದು ಹಲವರಿಗೆ ಧರ್ಮದ್ದು ಹೀಗೆ ಹೆಣ್ಣು ಮಣ್ಣಿನ ಹುಚ್ಚುಹೀಗೆ ಬಹುತೇಕರಿಗೆ ಹಣ ಅಧಿಕಾರ ಅಂತಸ್ತಿನ ಹುಚ್ಚು ತಲೆ ಕೆಡಿಸಿಕೊಬೇಡ ಸಖಿಎನ್ನುವ ಮಾತುಗಳಲ್ಲಿ ಸಮಾಜದ ಸತ್ಯ ಅಡಗಿದೆ. ಕೆಲವರು ಧರ್ಮ ಜಾತಿಯ ಉನ್ಮಾದದಲ್ಲಿ ತೇಲುತ್ತಿದ್ದರೆ ಕೆಲವರು ಹಣ, ಅಧಿಕರ ಹಾಗೂ ಅಂತಸ್ತಿನ ಗುಲಾಮರಾಗಿದ್ದಾರೆ. ಇನ್ನು ಕೆಲವರಿಗೆ ಹೆಣ್ಣಿನ ಹುಚ್ಚು. ಭಾರತ ಹೆಣ್ಣಿನ ಯೋನಿಯಿಂದ ಹರಿಯುವ ರಕ್ತದಲ್ಲಿ ಶುಭ್ರಸ್ನಾನ ಮಾಡುತ್ತಿದೆ. ಅತ್ಯಾಚಾರಗಳು ಹೆಚ್ಚಾಗಿರುವ ಈ ಕಾಲದಲ್ಲಿ ಇಂತಹ ಸಾಲುಗಳು ನಮ್ಮನ್ನು ಪದೇಪದೇ ಎಚ್ಚರಿಸುತ್ತವೆ. ‘ತನ್ನ ಹೆತ್ತವಳು ಒಡಹುಟ್ಟಿದವಳು ಒಂದು ಹೆಣ್ಣಂದರಿಯದ ಅವಿವೇಕಿ ಮೃಗಗಳಿವು’ ಎಂದು ವಿಷಾದಿಸುತ್ತಲೇ ಹೆಣ್ಣು ಪ್ರತಿ ಜೀವಕ್ಕೂ ನೀಡುವ ಸುಖವನ್ನು ನವಿರಾಗಿ ಹೇಳುತ್ತಾರೆ. ಕತ್ತಲೆಯಲಿ ಕಳೆದವನ ಬದುಕಿಗೆ ಬೆಳಕಾಗಿ ಬಂದವಳು ನೀ ಸಖಿಕಮರಿದ ಈ ಬದುಕಿಗೆ ಜೀವರಸ ತುಂಬಿದವಳು ನೀ ಸಖಿಹೆಣ್ಣು ಬದುಕಿನ ಕತ್ತಲೆಯನ್ನು ಹೋಗಲಾಡಿಸಿದವಳು. ಬದುಕಿಗೆ ಬೆಳಕಾಗಿ, ಬೆಳದಿಂಗಳಾಗಿ ಬಂದವಳು. ಬೇಸರದ ಬದುಕಿಗೆ ಆ ಪ್ರಿಯತಮೆ ಜೀವರಸವನ್ನು ತುಂಬುತ್ತಾಳೆ. ಜೀವಕ್ಕೆ ಜೀವವಾದ ಪ್ರಿಯತಮೆ ನಮ್ಮ ಬಾಳಿಗೆ ಬೆಳಕನ್ನು ತರುವ ಕಂದಿಲು ಎನ್ನುವುದು ತಪ್ತಗೊಂಡ ಎದೆಯೊಳಗೆ ಒಂದಿಷ್ಟು ತಂಪು ಸೂಸುತ್ತಾರೆ.ಕನಸಿನಲ್ಲಿ ಕಾಡುವಳು ಖುಷಿಯಲ್ಲೂ ಕುದಿಯುವಳುಬಿಸಿಲನ್ನೇ ಉಂಡು ಎಲ್ಲೆ ನೆರಳಾದಳು ಸಾಕಿ ಎನ್ನುವ ಮಾತಿನಲ್ಲಿಯೂ ಆ ಗೆಳತಿ ಉರಿಬಿಸಿಲಿನಲ್ಲೂ ತಮ್ಮನ್ನು ಸಲಹುವ ಕುರಿತು ಮನಸ್ಸು ಬಿಚ್ಚಿ ಹೇಳುತ್ತಲೇ ಕನಸಿನಲ್ಲಿ ಕಾಡುವ ಈ ಸುಂದರಿ ವಿರಹವನ್ನೂ ಕೊಡಬಲ್ಲಳು ಎನ್ನುತ್ತಾರೆ. ಹಾಗೆ ನೋಡಿದರೆ ವಿರಹವಿಲ್ಲದ ಪ್ರೇಮಕ್ಕೆ ಸವಿ ಎಲ್ಲಿದೆ? ವಿರಹವೇ ಪ್ರೇಮದ ಮಧುರತೆಯನ್ನು ಹೆಚ್ಚಿಸುತ್ತದೆ ಎಂಬುದನ್ನು ಈ ಜಗತ್ತಿನ ಎಲ್ಲ ಪ್ರೇಮಿಗಳೂ ಒಪ್ಪಿಕೊಂಡಿದ್ದಾರೆ. ಹಾಗಿದ್ದ ಮೇಲೆ ಈಗಾಗಲೇ ಹೇಳಿದಂತೆ ವಿರಹಕ್ಕೆಂದೇ ರಚಿತವಾಗಿರುವ ಗಜಲ್‌ನಲ್ಲಿ ವಿರಹವಿರದಿದ್ದರೆ ಏನು ಚೆನ್ನ ಹೇಳಿ?ಹತ್ತಿರವಿದ್ದೂ ಅಪರಿಚಿತರಂತೆ ದೂರವಾದವರ ಬಗ್ಗೆ ಕೇಳಿದ್ದೆದೂರವಿದ್ದೂ ಹತ್ತಿರವಾಗಿ ನಿನ್ನ ಸೇರುವಷ್ಟರಲಿ ನೀ ಕನಸಾದೆಈ ಹುಡುಗಿಯರೇನೂ ಕಡಿಮೆಯವರಲ್ಲ. ಹುಡುಗರನ್ನು ಕಾಡುವುದೇ ತಮ್ಮ ಜೀವನದ ಮಹದೋದ್ದೇಶ ಎಂದುಕೊಂಡವರು. ಹೀಗಾಗಿ ಇನ್ನೇನು ತನ್ನವಳಾದಳು ಎಂದುಕೊಳ್ಳುವಾಗಲೇ ದೂರ ಸರಿದು ತಮಾಷೆ ನೋಡುತ್ತಾರೆ. ಅಪರಿಚಿತಳು ಎಂದು ಸುಮ್ಮನಾದರೆ ತಾವಾಗಿಯೇ ಹತ್ತಿರ ಬಂದು ಆತ್ಮೀಯರಾಗುತ್ತಾರೆ. ದೂರವನ್ನು ಕ್ಷಣ ಮಾತ್ರದಲ್ಲೇ ಕರಗಿಸಿದರೂ ಕೈಗೆಟುಕದಂತೆ ಕನಸಾಗಿಬಿಡುವ ಕಲೆ ಹುಡುಗಿಯರಿಗಷ್ಟೇ ಗೊತ್ತಿದೆ. ಕವಿಗೆ ಹೀಗೆ ಪುಳಕ್ಕನೆ ಮಿಂಚಂತೆ ಮಿಂಚಿ ಮಾಯವಾಗುವ ಈ ಹುಡುಗಿಯರ ಕುರಿತು ವಿಚಿತ್ರ ತಲ್ಲಣವಿದೆ.ಈ ಪ್ರೀತಿ ಪ್ರೇಮ ವಿರಹ ಕಾಮದ ಬಗ್ಗೆ ಅನೇಕ ಕಥೆಗಳು ಗೊತ್ತುಹೊನ್ನಸಿರಿಯ ಈ ಅಲೌಕಿಕ ಪ್ರೀತಿ ಅರಿವಾಗುವಷ್ಟರಲಿ ನೀ ನಕ್ಷತ್ರವಾದೆಸದಾ ಜೊತೆಗಿರುತ್ತೇನೆ ಎಂದು ಆಣೆ ಕೊಟ್ಟು ಭಾಷೆಯಿತ್ತವರು ಹೀಗೆ ಒಮ್ಮೆಲೆ ದೂರ ಸರಿದು ನಕ್ಷತ್ರಗಳಾಗಿಬಿಡುವುದನ್ನು ಸಲೀಸಾಗಿ ಒಪ್ಪಿಕೊಳ್ಳಲಾಗುವುದಿಲ್ಲ. ಆದರೂ ಕವಿ ‘ಕಂದಿಲು ಬೇಡ ಕಣ್ಣ ಕಾಂತಿಯಲ್ಲಿ ಬಾ’ ಎನ್ನುತ್ತಾರೆ. ಇದು ಪ್ರೇಮದ ಪರಾಕಾಷ್ಟೆ. ತನ್ನ ಪ್ರೇಯಸಿಯ ಕಣ್ಣಿನ ಕಾಂತಿ ಎಲ್ಲ ಕಂದಿಲುಗಳ ಬೆಳಕನ್ನೂ ಮೀರಿಸುವಂತಹುದ್ದು ಎನ್ನುವುದು ಸಹಜ.ಕಾಯುವಲ್ಲಿ ಇರುವ ಕಾತರ ಸನಿಹದಲ್ಲಿ ಇರುವುದಿಲ್ಲಸಾಂಗತ್ಯಕ್ಕಾಗಿ ಸದಾ ಬಯಸಿ ಕಾಯುತ್ತಾನೆಹೀಗೆ ಕಾಯುವಿಕೆಯನ್ನು ನಿರಂತರವಾಗಿಸುತ್ತ, ಕಾಯುವುದೇ ತಪಸ್ಸು ಎಂದು ತಿಳಿದುಕೊಳ್ಳುವ ಕವಿಗೆ ಪ್ರೇಮ ಕೂಡ ಜೀವನದಲ್ಲಿ ಬೇಕಾಗಿರುವ ಭಾವಗಳಲ್ಲಿ ಒಂದು ಎಂಬ ಅರಿವಿದೆ. ಹೀಗಾಗಿಪ್ರೇಮಿಸಲಾಗದು ವಂಚಿಸಲಾಗದು ನಿನಗೆ ಮರೆತುಬಿಡುಹಂಬಲಿಸಿರಬಹುದು ಅಂಗಲಾಚಲಾಗದು ನಿನಗೆ ಮರೆತುಬಿಡು.ಎಂದು ಕೈಗೆ ಸಿಗದ್ದನ್ನು ಮರೆತು ಮುಂದೆ ಸಾಗಬೇಕಾದ ಜೀವನದ ಕುರಿತು ಎಚ್ಚರವಹಿಸುತ್ತಾರೆ. ಕೈಕೊಟ್ಟ ಪ್ರೇಮಿಯ ಬಗ್ಗೆ ಬೇಸರವಾಗುತ್ತದೆ ಎಂಬುದೇನೋ ನಿಜ. ಹಾಗೆಂದು ಅದೆಷ್ಟು ಸಮಯ ಕೊರಗಲಾದೀತು ಹೇಳಿ? ಹೀಗಾಗಿ ಆದದ್ದನ್ನೆಲ್ಲ ಮರೆತು ಮುಂದೆ ಸಾಗಬೇಕಾದ ಅನಿವಾರ್‍ಯತೆಯನ್ನು ಹೇಳುತ್ತಲೇ ಒಪ್ಪತ್ತಿನ ಗಂಜಿಗೂ, ತುಂಡು ರೊಟ್ಟಿಗೂ ಹೋರಾಟವಿದುಹಸಿವೆಯೇ ಖೋಡಿ ಏನೆಲ್ಲ ಮಾಡಿ ಹೆಣಗುತಿಹಳು ತಾಯಿಎಂದು ನಮ್ಮ ನಡುವೆ ತುತ್ತು ಕೂಳಿಗೂ ಕಷ್ಟ ಅನುಭವಿಸುತ್ತಿರುವವರ ವೇದನೆಯನ್ನು ಕಟ್ಟಿಕೊಡುತ್ತಾರೆ. ಮನೆ ನಡೆಸಲು ತಾಯಿ ಎಂಬ ಹೆಣ್ಣು ಅನುಭವಿಸುವ ಕಷ್ಟವನ್ನು ಗಂಡು ಅನುಭವಿಸಲಾರ. ಎಷ್ಟೋ ಮನೆಗಳಲ್ಲಿ ಹೆತ್ತಿಕೊಂಡ ತಪ್ಪಿಗಾಗಿ ಮಕ್ಕಳನ್ನು ಸಾಕುವ ಕರ್ಮ ತಾಯಿಯದ್ದೇ ಆಗಿರುತ್ತದೆ. ತನ್ನ ಕಾಮಕ್ಕಾಗಿ ಅವಳನ್ನು ಬಳಸಿಕೊಂಡು ತಾಯಿಯನ್ನಾಗಿ ಮಾಡಿದ ಮನೆಯ ಯಜಮಾನ ಎನ್ನಿಸಿಕೊಂಡ ಗಂಡಸು ಆ ಎಲ್ಲ ಜವಾಬ್ಧಾರಿಯನ್ನು ತಾಯಿಯ ತಲೆಗೆ ಕಟ್ಟಿ ನಿರುಮ್ಮಳವಾಗಿ ಬಿಡುವುದು ಈ ಸಮಾಜದ ಚೋದ್ಯಗಳಲ್ಲಿ ಒಂದು      ಈ ಎಲ್ಲದರ ನಡುವೆ ನಮ್ಮ ಗೋಮುಖ ವ್ಯಾಘ್ರತನವೊಂದು ಇದೆಯಲ್ಲ ಅದು ಈ ಸಮಾಜಕ್ಕೆ ಕಂಟಕ. ಬದುಕಿನಲ್ಲಿ ಯಾವ್ಯಾವುದೋ ಕಾರಣಕ್ಕಾಗಿ ಮುಖವಾಡ ಹಾಕುವವರ ಸಂಖ್ಯೆ ಬಹುದೊಡ್ಡದಿದೆ. ಆದರೆ ಸತ್ತ ಮೇಲೂ ‘ಸೇರಿದರೆ ಸೇರಲಿ ತಮ್ಮ ದೇಹದ ಬೂದಿಯು ಗಂಗೆಯಲಿ ಅನ್ನುವವರ ಬಹುದೊಡ್ಡ ಸಾಲುಂಟು’ ಎಂದು ಕವಿ ಬೇಸರಿಸುತ್ತಾರೆ. ಗಂಗೆಯನ್ನು ಸ್ವಚ್ಛಗೊಳಿಸಬೇಕಿದೆ ಎನ್ನುತ್ತಲೇ ತಮ್ಮ ದೇಹದ ಬೂದಿಯೂ ಗಂಗೆಯಲ್ಲಿ ಸೇರಿ ಜೀವಿತಾವಧಿಯಲ್ಲಿ ಮಾಡಿದ ಪಾಪಗಳೆಲ್ಲ ಕಳೆದುಹೋಗಲಿ ಎನ್ನುತ್ತ ಸ್ವರ್ಗ ಬಯಸುವವರ ಕುರಿತಾಗಿ ಹೇವರಿಕೆಯಿದೆ.ಸುತ್ತ ಪರಸ್ಪರರು ಬೆನ್ನು ನೀವಿಕೊಳ್ಳುವುದು ಇವನಿಗೇಕೆ ಅರ್ಥವಾಗುವುದಿಲ್ಲನೀ ನನಗಿದ್ದರೆ ನಾ ನಿನಗೆ ಎಂಬ ಸೋಗಲಾಡಿಗಳ ಮಧ್ಯೆ ಭ್ರಮ ನಿರಸನವಾಗುತ್ತಿದೆ ಸಾಕಿಎಂಬ ಸಾಲು ಇಂದಿನ ಸಮಾಜಕ್ಕೆ ಹಿಡಿದ ಕನ್ನಡಿಯಾಗಿ ಕಾಣುತ್ತದೆ. ಎಲ್ಲೆಡೆಯೂ ಗುಂಪುಗಳದ್ದೇ ಸಾಮ್ರಾಜ್ಯ. ನೀವು ನಮ್ಮ ಪರವಾಗಿದ್ದರೆ ಮಾತ್ರ ನಾವು ನಿಮ್ಮ ಪರವಾಗಿರುತ್ತೇವೆ ಎನ್ನುವ ದೊಡ್ಡವರು ಎನ್ನಿಸಿಕೊಂಡಿರುವವರ ಮಾತು ತೀರಾ ಅಸಹ್ಯ ಹುಟ್ಟಿಸುವಂತಹುದ್ದು. ತಮ್ಮ ಗುಂಪಿಗೆ ಸೇರಿದವರಿಗೆ ಎಲ್ಲ ಅನುಕೂಲಗಳನ್ನು ಮಾಡಿಕೊಡುತ್ತ, ಪ್ರಶಸ್ತಿಗಳ ಸರಮಾಲೆಯನ್ನೇ ಕಟ್ಟಿ ಕೊರಳಿಗೆ ಹಾಕುವ ಬಲಾಢ್ಯರಿಗೆ ಅವರ ಹಿಂಬಾಲಕರ ಸಂಖ್ಯೆ ಹೆಚ್ಚಾಗಬೇಕಿದೆ. ಇದಕ್ಕೆ ಇಂದಿನ ಸಾಹಿತ್ಯ ಲೋಕ ಕೂಡ ಹೊರತಾಗಿಲ್ಲ. ಕವಿ ತಮ್ಮ ಸಾಲುಗಳಲ್ಲಿಯೇ ಇಂತಹ ಸೋಕಾಲ್ಡ್ ಪ್ರಮುಖರನ್ನು ವ್ಯಂಗ್ಯವಾಡುತ್ತಾರೆ. ಸಿದ್ಧರಾಮ ಹೊನ್ಕಲ್

Read Post »

You cannot copy content of this page

Scroll to Top