ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಮನಿಷಾಗೊಂದು ಗಝಲ್

ಮನಿಷಾಗೊಂದು ಗಝಲ್ ಅರುಣಾ ನರೇಂದ್ರ ನಾನಿಲ್ಲಿ ಮೂಕಳಾಗಿರಬೇಕು ಮಾತನಾಡಿದರೆ ನಾಲಿಗೆ ಕತ್ತರಿಸುತ್ತಾರೆನೀನಿಲ್ಲಿ ಜೀವಂತ ಶವವಾಗಿರಬೇಕು ಪ್ರತಿಭಟಿಸಿದರೆ ಗುಂಡಿ ತೋಡಿಸುತ್ತಾರೆ ರಾಮನಾಳಿದ ಈ ನೆಲದಲ್ಲಿ ನಾನು ಮತ್ತೆ ಹೆಣ್ಣಾಗಿ ಹುಟ್ಟಿದ್ದೇನೆ ಗೆಳತಿಹೊಸಿಲು ದಾಟಿ ಲಕ್ಷ್ಮಣ ರೇಖೆಯನ್ನೂ ದಾಟುತ್ತೇನೆಂದರೆ ವನವಾಸ ಕಳಿಸುತ್ತಾರೆ ನಿರ್ಭಯಾ ಮಧು ದಿಶಾ ಮತ್ತೆಲ್ಲರ ಆರ್ತನಾದ ಇನ್ನೂ ಕೇಳಿಸಿದರೂ ಮತ್ತೆ ಎಂಥ ನಿರ್ಲಕ್ಷ್ಯಇಂದು ಮನಿಶಾ ನಾಳೆ ನನ್ನ ಸರದಿ ಬೇಡವೆಂದರೆ ಮಸಣದ ಮನೆ ತೋರಿಸುತ್ತಾರೆ ಯುಗ ಯುಗಗಳು ಅಳಿದರೂ ಇನ್ನೆಷ್ಟು ಹೆಣ್ಣು ಬಲಿಯಾಗಬೇಕು ಇವರ ಕಾಮದ ತೀಟೆಗೆಅಂಗಾಂಗಗಳ ಹರಿದು ತಿನ್ನುವ ಹೃದಯ ಹೀನರು ಪ್ರಶ್ನಿಸಿದರೆ ಪ್ರಾಣ ತಗೆಯುತ್ತಾರೆ ಭದ್ರತೆ ಬೇಡಿದರೆ ಹೇಗೆ ಸಿಕ್ಕೀತು ಅರುಣಾಗೆ ಕಡತದಲ್ಲೇ ಕಾನೂನಿಗೆ ಕೈ ಕಾಲು ಕಟ್ಟಿದ್ದಾರೆಬೇಲಿ ಇಲ್ಲದ ಹೊಲವ ಗೂಳಿಯಂತೆ ತಿಂದು ಹೆಣ ಮಾಡಿ ಸುಟ್ಟು ಕತೆ ಮುಗಿಸುತ್ತಾರೆ ******************************

ಮನಿಷಾಗೊಂದು ಗಝಲ್ Read Post »

ಇತರೆ

ಶಾಂತಲಾ ಮಧು ಬಹುಮುಖ ಪ್ರತಿಭೆ

ಶಾಂತಲಾ ಮಧು ಬಹುಮುಖ ಪ್ರತಿಭೆ ಶಾಂತಲಾ ಮಧು ಅವರ ಪರಿಚಯ ಶಾಂತಲಾ ಮಧು ಅವರು ಅಂತಾರಾಷ್ಟ್ರೀಯ ಯೋಗ ಗುರುವಾಗಿ ಕೆಲಸ ಮಾಡುತ್ತಿದ್ದಾರೆ. ಉಸ್ತಾದ್ ಬಾಲೇಖಾನ್ ಶಿಷ್ಯೆಯಾಗಿ ಸಿತಾರ್ ವಾದನ ಕಲಿತಿದ್ದಾರೆ. ಬಯಲು ಕವನ ಸಂಕಲನ ಪ್ರಕಟಿಸಿದ್ದಾರೆ. ಚಿತ್ರಕಲಾವಿದೆ ಸಹ . ಏಕವ್ಯಕ್ತಿ ಪ್ರದರ್ಶನ ನೀಡಿದ್ದಾರೆ . ಪತಿ ಮಧು ಅವರು ಯಾರ್ಡ್ಲಿ ಸಂಸ್ಥೆಯ ಉಪಾಧ್ಯಕ್ಷರು. ಪುತ್ರಿ ರಶ್ಮಿ ಅವರು ವೈದ್ಯೆ . ಮಗ ಗೌತಮ್ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಶಾಂತಲಾ ಅವರು ಕನ್ನಡ ಸಾಹಿತ್ಯ ಸ್ನಾತಕೋತ್ತರ ಪದವೀಧರೆ . ಕುವೆಂಪು ವಿಶ್ವವಿದ್ಯಾನಿಲಯದ ಎಲ್. ಬಿ ಕಾಲೇಜಿನಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿರುವ ಇವರು ‘ಬಯಲು’ ಎಂಬ ಕವನ ಸಂಗ್ರಹವನ್ನು ಪ್ರಕಟಿಸಿದ್ದಾರೆ . ೨೦ ವರ್ಷಕ್ಕೂ ಮೇಲ್ಪಟ್ಟು ಯೋಗ ಗುರುಗಳಾಗಿ ಅನುಭವ ಹಾಗೂ ಭಾರತ ಮತ್ತು ಅಮೆರಿಕ ಸೇರಿದಂತೆ ಸಾವಿರಕ್ಕೂ ಹೆಚ್ಚು ಜನಕ್ಕೆ ಯೋಗ ಕಲಿಸಿದ್ದಾರೆ . ಭಾರತ ಸರ್ಕಾರ ಅನುಮೋದಿತ ರಾಷ್ಟ್ರಮಟ್ಟದ ಯೋಗ ಶಿಕ್ಷಕ ಪ್ರಮಾಣಪತ್ರ ಗಳಿಕೆ. ” ಶ್ರೀ ಯೋಗ ಸೆಂಟರ್” ನ ಡೈರೆಕ್ಟರ್__ ಹದಿನೈದು ವರ್ಷಗಳಿಂದ ಬಿಎಂ ವೇರ್ ನಲ್ಲಿ ಎಂಟು ವರ್ಷದಿಂದ ಯೋಗ ಶಿಕ್ಷಣ ನೀಡಿಕೆ . ಹಲವಾರು ಯೋಗ ಪ್ರಾತ್ಯಕ್ಷಿಕೆ ಮತ್ತು ಕಾರ್ಯಾಗಾರಗಳ ನಿರ್ವಹಣೆ . “ಮಿಸೆಸ್ ಇಂಡಿಯಾ ಮೈ ಐಡೆಂಟಿಟಿ” ೨೦೧೯ ರಲ್ಲಿ ಸಾಮಾಜಿಕ ಪ್ರಭಾವ …. ಕಿರೀಟ… ” ಸಮಾಧಾನ ಸಲಹಾ ಕೇಂದ್ರದಲ್ಲಿ ಪ್ರಮಾಣೀಕೃತ ಸಲಹೆಗಾರ್ತಿ ರಾಷ್ಟ್ರಮಟ್ಟದ ಚಿತ್ರಕಲೆಗಾರ್ತಿ ವಿಪಸ್ಯನಾ ಧ್ಯಾನ ಪರಿಣತೆ ಸಿತಾರ್ ವಾದ್ಯಗಾರ್ತಿ ಮತ್ತು ಕರ್ನಾಟಕ ಶಾಸ್ತ್ರೀಯ ಸಂಗೀತ ವಿದ್ಯಾರ್ಥಿನಿ . ವಿವರಗಳು ಶಾಂತಲಾ ಅವರು ಬಾಲ್ಯದಿಂದ ಹಠಯೋಗ ಅಭ್ಯಸಿಸುತ್ತಿದ್ದಾರೆ . ಶ್ರೀರಾಮಕೃಷ್ಣ ವಿದ್ಯಾಶಾಲೆಯಲ್ಲಿ ಯೋಗದಲ್ಲಿ ಪ್ರಾಥಮಿಕ ಶಿಕ್ಷಣ. ನಂತರ ಪುಣೆಯಲ್ಲಿ ಬಿ.ಕೆ.ಎಸ್ ಅಯ್ಯಂಗಾರ್ ಸಂಸ್ಥೆಯಲ್ಲಿ ಪರಿಣತ ಯೋಗಾಭ್ಯಾಸ . ಈಗ ಸುಮಾರು ಇಪ್ಪತ್ತು ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಯೋಗ ಶಿಕ್ಷಕಿಯಾಗಿ ಭಾರತ ಮತ್ತು ಅಮೆರಿಕದಲ್ಲಿ ಯೋಗ ಕಲಿಸುತ್ತಿದ್ದಾರೆ. ಏಷಿಯನ್ ಫೆಸ್ಟಿವಲ್ (ಓಹಿಯೋ ) A. T. & T ಬೆಲ್ ಲ್ಯಾಬ್ಸ್ (ಕೊಲಂಬಿಯಾ) ಭಾರತೀಯ ಸಾಂಸ್ಕೃತಿಕ ಉತ್ಸವಗಳು ಮುಂತಾದ ಅಮೆರಿಕದ ಪ್ರತಿಷ್ಠಿತ ಸಂಸ್ಥೆ ಸಮಾರಂಭಗಳಲ್ಲಿ ಯೋಗ ಪ್ರಾತ್ಯಕ್ಷಿಕೆಗಳನ್ನು ನೀಡಿದ್ದಾರೆ . ಭಾರತದಲ್ಲಿ ಪುಣೆ ಹೈದರಾಬಾದ್ ಮತ್ತು ಬೆಂಗಳೂರುಗಳಲ್ಲಿ ಪ್ರದರ್ಶನ ನೀಡಿದ್ದಾರೆ. ಬೆಂಗಳೂರಿನಲ್ಲಿ ೧೫ ವರ್ಷಗಳ ಹಿಂದೆ ಶ್ರೀ ಯೋಗ ಸೆಂಟರ್ ಸ್ಥಾಪಿಸಿದ್ದಾರೆ. ಅದರ ಮೂಲಕ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಯೋಗದ ಮೂಲಕ ಆರ್ಥೈಟಿಸ್ ಮಧುಮೇಹ ರಕ್ತದ ಒತ್ತಡ ಸಂತಾನಹೀನತೆ ಅಸಿಡಿಟಿ ಅಸ್ತಮಾ ಬೆನ್ನುನೋವು ತಲೆನೋವು ಮೈಗ್ರೇನ್ ಇನ್ನೂ ಮುಂತಾದ ಕಾಯಿಲೆಗಳಿಂದ ನರಳುವ ರೋಗಿಗಳಿಗೆ ಗುಣಮುಖರಾಗಲು ನೆರವು ನೀಡಿದ್ದಾರೆ. ಯೋಗ ಮತ್ತು ಒತ್ತಡ ನಿವಾರಣೆಯ ಕ್ರಮಗಳಾದ ಪ್ರಾಣಾಯಾಮ ಮತ್ತು ಧ್ಯಾನಗಳನ್ನು ವಿ.ಎಂ .ವೇರ್ ಮೊದಲಾದ ಸಾಫ್ಟ್ವೇರ್ ಕಂಪನಿಗಳಲ್ಲಿ ಬೋಧಿಸಿದ್ದಾರೆ. ಶಾಂತಲಾ ಅವರದು ಬಹುಮುಖ ಪ್ರತಿಭೆ. ಚಿಕ್ಕಂದಿನಿಂದಲೇ ಕಲೆಯ ಹಲವಾರು ಪ್ರಕಾರಗಳಲ್ಲಿ ಅವರಿಗೆ ಆಸಕ್ತಿ.ಚಿತ್ರಕಲೆಯ ಸಾಂಪ್ರದಾಯಿಕ ಶಿಕ್ಷಣವನ್ನು ಪ್ರತಿಷ್ಠಿತ ಸಂಸ್ಥೆ ಮತ್ತು ವ್ಯಕ್ತಿಗಳಲ್ಲಿ ಪಡೆದಿದ್ದಾರೆ . ಮಿ. ಕೂಪರ್ ಸ್ಕೂಲ್ ಆಫ್ ಆರ್ಟ್ಸ್ ಓಹಿಯೋ ಯುಎಸ್ಎ (ಲ್ಯಾಂಡ್ಸ್ಕೇಪ್ ಮತ್ತುಪೋರ್ಟ್ರೈಟ್) ಶ್ರೀಮತಿ ಕಾರ್ಲೆ ಪುಣೆ (ಮಿನಿಯೇಚರ್ ಮತ್ತು ಮೊಘಲ್ ಕಲೆ) ಮಿ. ಶಂಸುದ್ದೀನ್ (ಮ್ಯೂರಲ್)ತೈಲ ಚಿತ್ರ ಸೆರಾಮಿಕ್ ಪೆಂಟಿಂಗ್ ಮೊದಲಾದ ಪ್ರಕಾರಗಳಲ್ಲಿ ವಿಶೇಷ ಪರಿಣತಿ ಹೊಂದಿರುವ ಶಾಂತಲಾ ಅವರ ಕಲಾಕೃತಿಗಳು ಜಮ್ಮು ಕಾಶ್ಮೀರ ರಾಜಸ್ಥಾನ ಹೈದರಾಬಾದ್ (ಚಿತ್ರಮಯಿ ಆರ್ಟ್ ಗ್ಯಾಲರಿ) ಪಂಜಾಬ್ ಬೆಂಗಳೂರು (ಚಿತ್ರಕಲಾ ಪರಿಷತ್) ಮತ್ತು ಯುಎಸ್ಎ ನಲ್ಲಿನ ಪ್ರತಿಷ್ಠಿತ ಆರ್ಟ್ ಗ್ಯಾಲರಿಗಳಲ್ಲಿ ಪ್ರದರ್ಶಿತವಾಗಿದೆ ಶಾಂತಲಾ ಅವರಿಗೆ ಪ್ರಕೃತಿಯೇ ಸ್ಫೂರ್ತಿ. ಉದ್ಯಾನವನಗಳು ಸಮುದ್ರ ತೀರ ಹಾಗೂ ಕಾಡುಗಳಿಗೆ ಭೇಟಿ ಕೊಟ್ಟು ಅಲ್ಲಿನ ದೃಶ್ಯಗಳನ್ನು ಕ್ಯಾನ್ವಾಸ್ಗೆ ತರಲು ಇಷ್ಟಪಡುತ್ತಾರೆ. ದೇವನ ಸೃಷ್ಟಿಯದು ಅತ್ಯದ್ಭುತ ಹಾಗೂ ತಾನು ಅದನ್ನು ಚಿತ್ರಿಸುವುದು ಮೆಚ್ಚುಗೆಯ ಒಂದು ವಿನಯಶೀಲ ಪ್ರಯತ್ನ ಮಾತ್ರ ಎನ್ನುತ್ತಾರೆ. ಶಾಂತಲಾ ಅವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕಿ ಸಿತಾರ್ ವಾದನವನ್ನು ಧಾರವಾಡದ ಉಸ್ತಾದ್ ಬಾಲೆ ಖಾನ್ ಅವರ ಬಳಿ ಅಭ್ಯಸಿಸಿದ್ದಾರೆ . ಶಾಂತಲಾರವರೊಂದಿಗೆ ಸಂಗಾತಿ ಮಾತಾಡಿದಾಗ ಸಂಗಾತಿ-ನಮಸ್ಕಾರ,ಸಂಗೀತ,ಚಿತ್ರಕಲೆ,ಯೋಗ,ಸಾಹಿತ್ಯ ಈ ನಾಲ್ಕೂ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ನಿಮಗೆ ಮೂಲಸ್ಪೂರ್ತಿ ಯಾರು? ಮಲೆನಾಡಿನ ಮಗಳಾದ ನನಗೆ -ಪ್ರಕೃತಿ ಮೂಲ ಪ್ರೇರಣೆ ಮತ್ತು ಸ್ಪೂರ್ತಿ ಸಂಗಾತಿ -ಮೇಲಿನ ನಾಲ್ಕು ಕ್ಷೇತ್ರಗಳಲ್ಲಿನಿಮ್ಮ ಹೃದಯಕ್ಕೆ ಹತ್ತಿರವಾದದು ಯಾವುದು? ಯೋಗ ಮತ್ತು ಧ್ಯಾನ ಸಂಗಾತಿ-ಸದ್ಯ ಯಾವ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದೀರಿ? ೧ ಯೋಗ ( I am teaching also) ೨ ಚಿತ್ರಕಲೆ ( I am participating online exhibition s)೩ ಸಿತಾರ್ ೪ ಬರಹ . ಸಂಗಾತಿ-ಈಗ ನಿಮ್ಮ ಮುಂದಿರುವ ಹೊಸ ಯೋಜನೆಗಳೇನು? ನನ್ನ ಯೋಗ ಮತ್ತು Counselling ಕಲೆಯ ಮೂಲಕ ಇನ್ನು ಹೆಚ್ಚು ಸಮಾಜ ಸೆೇವೆಗೆ ನನ್ನನ್ನು ನಾನು ತೊಡಗಿಸಿ ಕೊಳ್ಳಬೇಕು೨ ಇನ್ನು ಹೆಚ್ಚು ಓದುವ ಮೂಲಕ ನನ್ನ ಬರಹ ಶಕ್ತಿ ಹೆಚ್ಚಿಸಿ ಕೊಳ್ಳಬೇಕುಕಥೆ ಬರೆಯುವ ಕನಸೂ ಇದೆ.೩ ಸಿತಾರ್ ಮತ್ತು ಚಿತ್ರಕಲೆ ಯ ಅಭ್ಯಾಸ ನಿದಾನವಾಗಿ ಸಾಗುತ್ತಲೆ ಬರುತ್ತಿದೆ. ಸಂಗಾತಿ-ಕೊನೆಯ ಪ್ರಶ್ನೆ ನಿಮ್ಮ ಸಾದನೆಗಳು ನಿಮಗೆ ತೃಪ್ತಿತಂದಿವೆಯಾ? ಇಲ್ಲ ಸಾರ್ಆದರೆ ಅದಕ್ಕಾಗಿ ಶೋಕಿಸುವುದು ಬಿಟ್ಟಿರುವೆ, ಕೆಲವೊಮ್ಮೆ ಅನ್ನಿಸುತ್ತದೆ ಯಾವುದಾದರು ಒಂದೇ ಕಲೆ ಯ ಪ್ರಕಾರ ಇಟ್ಟು ಕೊಳ್ಳ ಬೇಕಿತ್ತು ಸಾಧನೆಗೆ ಎಂದುಆದರೆ ನನಗೆ ಎಲ್ಲವೂ ಅತ್ಯಂತ ಪ್ರಿಯ ಅವು ನನ್ನ ಜೀವನ ಸಂಗಾತಿಗಳು ನಾನು Vipasana Meditation ಅಭ್ಯಾಸ ಮಾಡುತ್ತಿರುವೆ ‘ ಅನಿಚ್ಚ’ಎನ್ನುವುದು ನನ್ನ ಮಂತ್ರ ಈ ಕ್ಷಣದ ಬದುಕುಯನ್ನು ನಂಬುತ್ತೆನೆ, ಶಾಂತಲಾ ಮಧುರವರ ಚಿತ್ರಗಳು ಶಾಂತಲಾ ಮಧುರವರ ಪುಸ್ತಕ ************************************************************************

ಶಾಂತಲಾ ಮಧು ಬಹುಮುಖ ಪ್ರತಿಭೆ Read Post »

ಪುಸ್ತಕ ಸಂಗಾತಿ

ಹಿಮದೊಡಲ ಬೆಂಕಿ

ಪುಸ್ತಕ ಪರಿಚಯ ಹಿಮದೊಡಲ ಬೆಂಕಿ ಹಿಮದೊಡಲ ಬೆಂಕಿ.ಗಜ಼ಲ್ ಸಂಕಲನ.ಬೆಲೆ:- 80/-ಲೇಖಕರು :-ಅರುಣಾ ನರೇಂದ್ರಸಿದ್ಧಾರ್ಥ ಪ್ರಕಾಶನ ,ನಂದಿ ನಗರ , ಕೊಪ್ಪಳ. ಅರುಣಾ ನರೇಂದ್ರ ಅವರ ಹಿಮದೊಡಲ ಬೆಂಕಿ ಗಜ಼ಲ್ ಸಂಕಲನದ ಒಳಗೊಂದು ಸುತ್ತು… ಅರುಣಾ ನರೇಂದ್ರ ರವರು ಕೊಪ್ಪಳ ಜಿಲ್ಲೆಯವರಾಗಿದ್ದು ಈ ನಾಡಿನ ಹೆಸರಾಂತ ಮಹಿಳಾ ಸಾಹಿತಿಗಳಲ್ಲಿ ಇವರೂ ಒಬ್ಬರು. ಮುಖತಃ ನೋಡಿಲ್ಲದ, ಮಾತನಾಡಿಲ್ಲದ ಕೇವಲ ವಾಟ್ಸ್ ಆಪ್ ಗ್ರೂಪ್‌ನಿಂದಲೇ ಅಕ್ಷರಗಳ ಮುಖೇನ ಇವರೊಂದಿಗೆ ಅನುಸಂಧಾನ ಮಾಡುತ್ತಿರುವ ನಾನು ಇವರು  ಉದಯೋನ್ಮಖ ಬರಹಗಾರರ ಬರಹಗಳಿಗೆ ಮನಬಿಚ್ಚಿ ಬೆನ್ನುತಟ್ಟುವ ಕಾರ್ಯಕ್ಕೆ  ಮನಸೋತಿರುವೆ. ಸಹೋದರಿ ಸಮಾನರಾದ  ಇವರ ಈ ಹಿಮದೊಡಲ ಬೆಂಕಿ ವಿಭಿನ್ನ ದೃಷ್ಷಿಯ ಆರ್ದ್ರ ಸ್ವರೂಪದ ಗಜ಼ಲ್ ಸಂಕಲನಕ್ಕೆ ಭಾವ ತೀವ್ರತೆಯಿಂದ ನರಳಿಸುತ್ತಾ ಬದುಕು ಅರಳಿಸುವ ಗಜ಼ಲ್ ಗಳು ಎನ್ನುವ ಶಿರೋನಾಮೆಯನ್ನು ಹೊಳಪಿಸಿ ಗಜ಼ಲ್ ನ ಆಕೃತಿ ಮತ್ತು ಆತ್ಮಕ್ಕೆ ಜೀವ ದ್ರವ್ಯ ತುಂಬಿ ಮುನ್ನುಡಿ ಬರೆದ ಬಾಗಲಕೋಟೆ ಜಿಲ್ಲೆಯ ಖ್ಯಾತ ಹಿರಿಯ ಸಾಹಿತಿಗಳಾದ ಅಬ್ಬಾಸ್ ಮೇಲಿನಮನಿಯವರ   ಮುನ್ನುಡಿಯಿಂದ ಗಜ಼ಲ್ ನಾದ ಲೋಕದ ಜೀವ ತಂತಿಯಂತಿರುವ ಅರುಣಾ ನರೇಂದ್ರ  ರವರು ಕನ್ನಡ ಸಾಹಿತ್ಯ ಲೋಕದಲ್ಲಿ ಈಗಾಗಲೇ ರುಬಾಯಿ, ಹಾಯ್ಕು, ಕವನ, ತತ್ವಪದ,ನಾಟಕ ಕಲೆ  ಮುಂತಾದ ಹಲವಾರು ಪ್ರಕಾರಗಳಲ್ಲಿ ಪಳಗಿದ ಕೈ ಎಂಬುದು ತಿಳಿದು ಖುಷಿಯಾಯಿತು ; ಜೊತೆಗೆ ಈ ಸಂಕಲನ ಇವರ ಹದಿಮೂರನೇ ಕೃತಿ. ಇವರು ಕನ್ನಡ ಸಾಹಿತ್ಯದ ಕೃಷಿಯನ್ನು ಹೇಗೆ ಹದಗೊಳಿಸಿದ್ದಾರೆ ಎಂಬುದು ಇದರಿಂದಲೇ ತಿಳಿಯಬಹುದು . ಗಜ಼ಲ್ ಅರಬಿ ಶಬ್ದ ” ಹೆಂಗಸರೊಡನೆ ಮಾತನಾಡುವುದು, ಸಂಭಾಷಿಸುವುದು, ಪ್ರೇಮ, ಮೋಹ ಅನುರಾಗ ವ್ಯಕ್ತಪಡಿಸುವುದೆಂದು ಅರ್ಥ. ಪಾರಿಭಾಷಿಕವಾಗಿ ಹೇಳುವುದಾದರೆ ” ಹೃದಯದ ವೃತ್ತಾಂತ  ಮತ್ತು ಪ್ರೇಮ ಮೋಹಗಳ ವಿದ್ಯ ಮಾನಗಳ ಹೇಳಿಕೆ “ ಗಜ಼ಲ್ ಕಾವ್ಯಕ್ಕೆ ಇಂತಹುದೇ ವಿಷಯ ಎಂಬುದಿಲ್ಲ . ಪ್ರಾರಂಭದಲ್ಲಿ ಇದೊಂದು ಸಾಂಪ್ರದಾಯಿಕ ಕಾವ್ಯವಾಗಿತ್ತು. ಆದರೆ ಇತ್ತಿಗೆ ಎಲ್ಲಾ ವಿಷಯ ವಸ್ತುಗಳ ಮೇಲೂ,  ಸಾಮಾಜಿಕ ತಲ್ಲಣಗಳ ಮೇಲೂ,  ಪ್ರಕೃತಿ, ಆಧ್ಯಾತ್ಮಿಕ ,ಸ್ವಾತಂತ್ರ್ಯ ದ ಮೇಲೂ ಗಜ಼ಲ್ ರಚಿತವಾಗಿ ಜನ ಮನವನ್ನು ಹೆಚ್ಚು ಹೆಚ್ಚು ತಲುಪಿಸುವ ಕಾರ್ಯವಾಗುತ್ತಿದೆ. ಈ ಸಂಕಲನದಲ್ಲಿ ಒಟ್ಟು ೬೧ ಗಜ಼ಲ್ ಗಳಿವೆ. ಕಾವ್ಯ ಲೋಕದ ಅನುಭವಗಳಿಂದ ಪಕ್ವಗೊಂಡ ಜೀವ ಸಂವೇದನೆಗಳನ್ನು ಒಡಲೊಳಗೆ ಹುದುಗಿಸಿಕೊಂಡು ಮನುಷ್ಯ ಸಂಬಂಧಕ್ಕಾಗಿ ತುಡಿಯುವ ,ಮಾನವೀಯತೆಯ ಅಭಿವ್ಯಕ್ತಿಗೆ  ಧಾವಂತ ತೋರಿ ಆತ್ಮದ ಶೋಧನೆಗೆ ತೊಡಗಿಸಿಕೊಂಡ ಅನುಭಾವದ ನಿಜ ನೆಲೆಯನ್ನು ದರ್ಶಿಸುವ ವ್ಯಕ್ತಿ ಎಂದು ಈ ಗಜ಼ಲ್ಗಳ ಮಿಸ್ರಗಳಿಂದ ತಿಳಿಯಬಹುದು… ಮೇಲೆ ಚರ್ಮದ ಹೊದಿಕೆ , ದೇಹ ಎಲುಬಿನ ಗೂಡು ಬರಿ ಅಸ್ಥಿಪಂಜರ ನರಳಿ ನರಳಿ ಮಣ್ಣನಪ್ಪುವ ಮುನ್ನ ಎದೆಗೊಮ್ಮೆ ಬಂದು ಒದೆದು ಹೋಗು. ಗ.೧೧ ಬರಲಿ ಬೇನೆ ಬೇಸರಿಕೆಗಳ ಮಹಾಪೂರ ನಶ್ವರ ಸುಖ ನನಗೆ ಬೇಕಾಗಿಲ್ಲ ಕೈ ಸೋಲುವವರೆಗೂ ಹುಟ್ಟು ಹಾಕಿ ಬಾಳ ನೌಕೆಯೊಂದಿಗೆ ರಾಜಿಯಾಗುತ್ತೇನೆ… ಗ.೧೪ ಮನುಜರೆದೆಯ ಗಾಯಗಳಿಗೆ ಮುಲಾಮು ಹಚ್ಚುತ್ತೇನೆ ಉಸಿರಿರುವವರೆಗೆ ಸತ್ತ ಮೇಲೆ ಅರುಣಾಳ ಶವದ ಮುಂದೆ ಕಣ್ಣೀರನು ಹಾಕಬೇಡಿ… ಗ.೧೭ ಶುದ್ಧ ನಿರಾಕಾರ ಬಹ್ಮ ತಾನೆಂದು ತಿಳಿದಾಗ ಆತ್ಮ ಪರಮಾತ್ಮನೊಡಗೂಡಿ ಮಾತು ಮೌನವಾಗುತ್ತದೆ ..ಗ.೫೫. ಬಾಳ ಬನದಲಿ ಬೆಳೆದ ಅವಗುಣದ ಕಳೆ ತೆಗೆದು ಹುಲುಸಾಗಬೇಕು ಮನದ ಬಯಲಲಿ ಅಷ್ಟಮದಗಳ ಕಳೆದು ಹಸನಾಗಬೇಕು ಬದುಕು. ಗ.೩೬. ಈ ಗಜ಼ಲ್ ತನ್ನನ್ನೇ ತಾನು ಓರೆಗಚ್ಚಿಕೊಂಡು ಆತ್ಮ ಸಾಕ್ಷಾತ್ಕಾರ ಹೊಂದುವ ಹಾದಿಗೆ ಜಾರಿದಂತೆ  ಕಂಡು ಬಂತು. ತಮ್ಮ ಸುದೀರ್ಘ ಸಾಹಿತ್ಯದ ಪಯಣದಲ್ಲಿ ಬದುಕಿನ ನಿಜ ಅರ್ಥ ತಿಳಿದ ಇವರು ಸಮಾಜದ ಅಂಧಕಾರಗಳಿಗೆ ಬೇಸತ್ತು ಕೈ ಚೆಲ್ಲಿದ ಹಲವಾರು ಸಂಕಟಗಳು, ಮನೋವ್ಯತೆಗಳು ಎದೆಗಾನಿಸಿ ಕಂಬನಿ ಮಿಡಿದು ಸೆಟೆದು ನಿಲ್ಲುವಂತೆ  ಇಲ್ಲಿ ಸುಳಿಯುತ್ತವೆ… ಗುಡಿಸಲಿನ ಜನರು ಕಂಡ  ಕನಸುಗಳು ಮಹಡಿಯಲಿ ಕೊಳೆತು ಹೋಗುತ್ತವೆ ಬಲಾತ್ಕಾರಕ್ಕೆ ಒಳಗಾದ ಹೆಣ್ಣು ಮಕ್ಕಳು ಗೋರಿಯಲಿ ನರಳುತ್ತಾರೆ ಈ ಲೋಕದಲ್ಲಿ..ಗ. ೩೫.  ಈ ಮಿಸ್ರಗಳು ಕೆಲವು ಉಲ್ಲೇಖಗಳಷ್ಟೇ….. ಶೋಷಿತರ ಧ್ವನಿಗೆ ಕಿವಿಯಾಗಿ ಎದೆಯ ಆಲಯದಲಿ ಆಸರೆ ನೀಡುವ ಬಹುತೇಕ ಗಜ಼ಲ್ ಗಳು ಒಂದಕ್ಕಿಂತ ಒಂದು ವಿಭಿನ್ನ ಅರ್ಥ ಕಲ್ಲಿಸುವ ಬರಹ  ಈ ಸಂಕಲನದಲ್ಲಿ ಮನೆ ಮಾಡಿದೆ ಆದರೆ ನಾನು ಇಲ್ಲಿ ಇದನ್ನು ಮಾತ್ರ ಉದಾಹರಿಸಿರುವೆ… ತುಳಿತಕ್ಕೆ ಒಳಗಾದ ಜನರೆಲ್ಲ ಮೇಲೆದ್ದು ಕಟಿಬದ್ದರಾಗಲು ಹರಸು ಉಂಡ ಕಹಿ ನೋವಿನ ನೆತ್ತರದ ಹಾಳೆಯಲಿ ಅರುಣಾಳ ಹೊಸ ಇತಿಹಾಸವನ್ನೇ ಬರೆಸು ಸಾಕಿ..ಗ. ೪೭. ಚಿಂದಿ ಆಯ್ದ ಕೈಗೆ ಪೆನ್ನು ಪುಸ್ತಕವಿತ್ತು ಅಕ್ಷರದ ಜಾತ್ರೆಗೆ ಅವರನ್ನು ಕಳಿಸು ಸಾಕಿ. ದ್ವೇಶ , ಅಸೂಯೆ, ವಂಚನೆ, ಮತ್ಸರ, ಹೊಡದಾಟ, ಹಾರಾಟ ,ಸ್ವಾರ್ಥ ಏಕೆ ಬೇಕು ಜೀವನ ಮೂರು ದಿನದ ಸಂತೆ  ಜನರೆಲ್ಲರನ್ನು ಪ್ರೀತಿಯಿಂದ ಕಾಣು ಮಾನವತೆಯಿಂದ ಮಹಾ ಮಾನವನಾಗು ಎನ್ನವ ಸಂದೇಶ ನೀಡಿ  , ಆ ಹಾದಿಯಲ್ಲಿ ಬದುಕು ಸವೆಸಲು  ಹೆಣಗುತ್ತಿರಬಹುದು ಎಂದೆನಿಸದಿರದು. ಹೀಗೆ ಓದುತ್ತಾ ಸಾಗಿದಂತೆ ಲೌಕಿಕ ಜಗತ್ತಿನ ಜಂಜಡಗಳಿಂದ ಅಲೌಕಿಕ , (ಅಧ್ಯಾತ್ಮ)ದತ್ತ ಹೊರಳಿಸುವ ಇವರ ಬರಹಗಳು ಜೀವಕ್ಕೆ ಸಂಜೀವನಿಯನ್ನು ಹರಿಸಿ  ಹೊಸ ಚೈತನ್ಯವನ್ನು ತಂದುಕೊಡುತ್ತದೆ. ಈ ಸಂಕಲನದ ಜೊತೆಗೆ ಇನ್ನಷ್ಟು ಮತ್ತಷ್ಟು ಸಂಕಲನಗಳು ಹೊರ ತಂದು ಸಮಾಜದ ಅಂಕು ಡೊಂಕಿನ ಕವಲು ದಾರಿಗಳನ್ನು ಸಮಸಮಾಜವಾಗಿಸುವಲ್ಲಿ ಇವರ ಸಾಹಿತ್ಯ ಧ್ವನಿಸಲಿ ಎಂದು ಈ ಸಂದರ್ಭದಲ್ಲಿ ಶುಭಹಾರೈಸುತ್ತಾ ಇವರ ನೆರಳಿನಲ್ಲಿ  ಹೊಸ ತಲೆಮಾರಿನ ಉದಯೋನ್ಮುಖ ಬರಹಗಾರರು ಸಾಹಿತ್ಯದ ಸವಿ ಉಂಡು ಬೆಳಕಿಗೆ ಬರಲೆಂದು ಆಶಿಸುತ್ತೇನೆ. ************************ ಅಶೋಕ ಬಾಬು ಟೇಕಲ್ಷ

ಹಿಮದೊಡಲ ಬೆಂಕಿ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಸುಜಾತಾ ರವೀಶ್ ಬಾಳಿನ ಪಥದಲಿ ಬೀಸಿದ ತಂಗಾಳಿ ನೆನಪುಗಳ ಹಸಿಯಾಗಿಸಿತು ನಾಳಿನ ಕನಸಿನ  ಕಲ್ಪನೆ ಹಾದಿಯು ಮೆಲುಕುಗಳ ಬಿಸಿಯಾಗಿಸಿತು  ಧುತ್ತನೆ ಕವಿದಿಹ ಕಾರ್ಮೋಡ ಬಾನನು ಮಂಕಾಗಿಸಿತು ಒಮ್ಮೆಲೆಯೇ ಮೆತ್ತನೆ ಬರುತಿಹ ಹೊಂಗಿರಣ ನಗುವಿನ ಹೂಬಿಸಿಲಲಿ ಸೊಗಸಾಗಿಸಿತು ಮಾರ್ದವ  ಭಾವವ ಮುಳ್ಳಿನ ಮೊನೆಯೊಲು ಚುಚ್ಚ ತೊಡಗಿತು ಚಿಂತೆಯು ಹಾರ್ದಿಕ ಆಶಯ ಹೃದಯವ ಮುಟ್ಟುತ ಶಂಕೆಗಳನು ಮರೆಯಾಗಿಸಿತು ಜೀವನ ನೌಕೆಯು ಸಿಲುಕಿ ಬಿರುಗಾಳಿಗೆ ಹೊಯ್ದಾಡುತಿದೆ ಹೀಗೇಕೆ? ದೇವನ ಒಲುಮೆ ಭದ್ರತೆ ನೀಡುತ ಭರವಸೆಯಲಿ ಖುಷಿಯಾಗಿಸಿತು ಹಂಬಲ ಕಾಮನೆ ಮನುಜನ ಬದುಕಲಿ ನನಸಾದರೆನಿತು ಒಳಿತು ನಂಬಿದ ದೈವದ ಸನ್ನಿಧಿ ಸುಜಿಯ ಅಂತರಂಗದಲಿ ಮೊರೆಯಾಗಿಸಿತು   *******************************************

ಗಝಲ್ Read Post »

ಪುಸ್ತಕ ಸಂಗಾತಿ

ಪುಸ್ತಕ ಪರಿಚಯ

ಅಲೆವ ನದಿ ಅಲೆವ ನದಿಗಜಲ್ ಗಳುಕವಿ :- ಕಿರಸೂರ ಗಿರಿಯಪ್ಪಪ್ರಕಾಶನ :- ಸನ್ಮತಿ ಪ್ರಕಾಶನ ಬಾಗಲಕೋಟೆಬೆಲೆ‌:- ೮೦ಪುಟಗಳು :- ೫೮ ಗಜಲ್ ಎಂದಾಕ್ಷಣ ನೆನಪಿಗೆ ಬರುವುದುಪ್ರೇಮಿಗಳ ಸರಸ ಸಲ್ಲಾಪ ,ಮನದಾಳದ ಸುಕೋಮಲ ಭಾವನೆಗಳು, ಹೆಂಗಳೆಯರ ಪಿಸು ನುಡಿಗಳು , ಒಳಹೊಕ್ಕು ಹೊರ ನೋಡುವ ತೀಕ್ಷ್ಣಮತಿ ಸೂಕ್ಷ್ಮವಾದ ಭಾವನೆಗಳ ಪೂರಣ, ಗಜಲ್ನಸಾಮಾನ್ಯ ಲಕ್ಷಣಗಳು ಕಾಫಿಯಾ ,ರದೀಪ್,ಮತ್ಲಾ,ಮಕ್ತಾ, ಕಾಣಬಹುದು ನೆರಳು-ಬೆಳಕಿನಾಟದಂತೆ ಇವುಗಳನ್ನು ಹೊಂದಾಣಿಕೆ ಮಾಡಿದರೆ ಮಾತ್ರ ಗಜಲ್ ಆಗಲ್ಲ ಸಹಜವಾಗಿ ಮೇಳೈಸಿಕೊಂಡು ಹೃದಯವನ್ನು ತಟ್ಟಿ ಬಡಿದೆಬ್ಬಿಸಬೇಕು. ಗಜಲ್ಗಳು ಮನಸೂರೆಗೊಂಡು ಒನ್ಸ್ ಮೋರ್ ಭಾವನೆಯನ್ನು ಹೊರ ಸೂಸಬೇಕು,ಅಂದಾಗ ಆ ಗಜಲ್ ನ ಶೇರ್ ಕೇಳಿದಾಕ್ಷಣ ವ್ಹಾ ! ಉತ್ಕಟವಾದ ಭಾವನೆ ಹೊರಹೊಮ್ಮಬೇಕು ಅದು ಗಜಲ ಶಕ್ತಿ. ಬಾಗಲಕೋಟೆ ಜಿಲ್ಲೆಯ ಕಿರಸೂರು ಗಿರಿಯಪ್ಪನವರ ಗಜಲ್ ಸಂಕಲನ ಅಲೆವ ನದಿ ಒಳಗಿನ ಅಂತರಾತ್ಮವನ್ನು ಒಂದು ಸಾರಿ ನೋಡಿ ಬರೋಣ…ಮೊದಲಿಗೆ ಪುಸ್ತಕದ ಬಗ್ಗೆ ಮಾತನಾಡುವುದಾದರೆ ಮುದ್ರಣ ಬಹಳ ಅಚ್ಚುಕಟ್ಟಾಗಿ ಮುಖಪುಟದ ಚಿತ್ರವು ಕೂಡ ಅಷ್ಟೇ ಸೊಗಸಾಗಿ ಮನ ಸೆಳೆಯುವಂತೆ ಮೂಡಿಬಂದಿದೆ, ಮುಖಪುಟ ತಯಾರಿಸಿದ ಕಲಾವಿದರಿಗೆ ನನ್ನದೊಂದು ನಮನ. ಇದೊಂದು ನಿತ್ಯ ಅಲೆದಾಟ ಕಲ್ಮಶಗಳನ್ನುತೊಳೆದು ನಿತ್ಯ ಪರಿಸರ ಮಾತೆಯು ತನ್ನೊಡಲಲ್ಲಿ ತುಂಬಿಕೊಳ್ಳುವಳು ದಾಹವನ್ನು ನೀಗಿಸಿ ,ಜಾತಿ- ಮತ-ಪಂತ ಭೇದಗಳನ್ನು ಮರೆತು ಸ್ವಚ್ಛಂದವಾಗಿ ಹರಿಯುವ ಮಾತೆ , ನಿರ್ಗುಣ ,ನಿರಾಕಾರ,ಅಲೆವ ನದಿ ಪುಸ್ತಕದ ಒಳ ಹೂರಣವನ್ನು ತಿಳಿಯೋಣ ಈ ಪುಸ್ತಕದ ಟೈಟಲ್ ಕೂಡ ಬಹಳ ಚಂದವಿದೆ. ಗಜಲ್ ಗಳೆಂದರೆ ಪ್ರೇಮಿಗಳ ವಿರಹ, ಪ್ರೇಮಿಗಳ ಉತ್ಕಟ ಭಾವನೆ, ಸರಸ-ವಿರಸ ಸಮರಸ, ಪ್ರೀತಿಯ ಉತ್ತುಂಗದ ಸ್ಥಿತಿ, ನಿರಾಸೆ, ಕಾಮನೆಗಳು, ಕುಡುಕರ ಮಾತುಗಳು, ಹೆಂಗಳೆಯರ ಮನದಾಳದ ಪಿಸು ಮಾತುಗಳು, ಬದುಕಿನ ಮಧುಪಾತ್ರೆ, ಮೊದಮೊದಲು ಒಂದೇ ಗುಂಪಿಗೆ ಗಜಲ್ ಸೇರಿಕೊಂಡಿತ್ತು ಆದರೆ ಕಾಲ ಬದಲಾದಂತೆ ಅದರ ವಿಸ್ತಾರವು ಕೂಡ ಬದಲಾಗಿದೆ‌ ಹೇಗೆ ? ತನ್ನ ವಿಸ್ತಾರದ ಹರಿವನ್ನು ಗಜಲ್ ಲೋಕವು ಬಹು ವಿಸ್ತಾರವಾಗಿ ಹರಡಿಕೊಂಡಿದೆ ಜಗದ ಜಂಜಡ ಗಳಿಗೆ ಮಿಡಿಯುವ ಮನ, ಸದ್ಯದ ಆಗು ಹೋಗುಗಳಿಗೆ ಸ್ಪಂದಿಸುವ ಗಜಲ್, ರಾಜಕೀಯ,ಆರ್ಥಿಕ ಸ್ಥಿತಿ, ಮಹಿಳಾ ಪರ ಹೋರಾಟ ಧ್ವನಿ,ದಬ್ಬಾಳಿಕೆ, ದೌರ್ಜನ್ಯ, ಶೋಷಣೆ, ಗಡಿಯಾಚೆಯು ಪ್ರೀತಿಯ ಹಂಚುವಿಕೆಯ ಹುಡುಕಾಟವನ್ನು ಬಹುತೇಕ ಗಜಲ್ ಕವಿಗಳಲ್ಲಿ ಈಗೀಗ ನೋಡಬಹುದು ಇದು ಒಳ್ಳೆಯ ಬೆಳವಣಿಗೆ. *ಬತ್ತಿದ ಬಾವಿದಂಡ್ಯಾಗ* *ಬತ್ತಿದ ಬಾವಿದಂಡ್ಯಾಗ ಗುಬ್ಬಚ್ಚಿಗಳ ಪಾದ ನಲುಗ್ಯಾದೊ |*ಬ್ಯಾಸಗಿ ಹೊಡೆತಕ್ಕೆ ಇರುವೆಗಳ ಪಾದನಲುಗ್ಯಾದೊ | ಈ ಮತ್ಲಾ ಗಮನಿಸಿದಾಗ ಈಗ ಗುಬ್ಬಚ್ಚಿ ಕಣ್ಮರೆಯಾಗಿ ಪರಿಸರದಲ್ಲಿ ಅವುಗಳ ಕಲರವ ಇಲ್ಲದೆ ಮನುಜ ಮೂಕವಾಗಿದ್ದಾನೆ .ಮಳೆ‌ವಿಲ್ಲದೆ ಸಣ್ಣ ಜೀವಿ ಇರುವೆ ಕೂಡಾ ಬಹಳ ತೊಂದರೆಯಲ್ಲಿ ಇವೆ ಎನ್ನುವ ಅವರ ಪರಿಸರ ಕಾಳಜಿಯ ಪ್ರಸ್ತುತ ಮನುಜ ದುರಾಸೆಯನ್ನು ಈ ಮತ್ಲಾದಲ್ಲಿ ಗಮನ ಸೆಳೆಯುತ್ತದೆ. *ಅಳುವ ಮೋಡದ ಕಣ್ಣಿಗೆ* *ಅಳುವ ಮೋಡದ ಕಣ್ಣಿಗೆ‌ ನೆಲದ ಬಾಯಿ ಕಂಡಾಗ ಎಂಥಾ ಚಂದ |**ಕೊರಗೊ ರೆಂಬೆಯ ಒಡಲಿಗೆ ಮಣ್ಣ ನಗು ಸಿಕ್ಕಾಗ ಎಂಥಾ ಚಂದ |* ನಾಡಿನಲ್ಲಿ ‌ಮಳೆ ಬೆಳೆ ಎಲ್ಲಾ ಕಾಲಕ್ಕೆ ತಕ್ಕಂತೆ ಸರಿಯಾಗಿ ಆದರೆ ಬಹಳ ಚಂದ ,ಸಾಯುವ ಜೀವಕ್ಕೆ ಹಿಡಿ ಆಶ್ರಯ ಸಿಕ್ಕರೆ ಎಷ್ಟೋ ಆ ಮನ ಸಂತಸ ಗೊಳ್ಳುತ್ತದೆ ಅಲ್ಲವೆ ಕಲ್ಪನೆಯನ್ನು ಕವಿ ನಿತ್ಯ ಪರಿಚರ ಮೂಲಕ ಹೇಳಿದ್ದಾರೆ.ವ್ಹಾ.! *ಕಂಬನಿಯ ಪಾತ್ರೆ* *ಅವಳು ರಾತ್ರಿಯ ಬೆದೆಗೆ ನಲುಗಿ ಕನಸುಗಳ ಕಣ್ಣೀರು ಸುರಿದಳು |**ನನ್ನ ಹೃದಯದ ಪದ ಮಧು ಶಾಲೆಯ ಜೋಗುಳವಾಗಿ ತೇಲುತ್ತಿತ್ತು |* ಕವಿ ಅವಳು ರಾತ್ರಿ ಬೆದರಿ ,ಕನಸುಗಳು ಕಮರಿ ನಯನಗಳು ಒದ್ದೆಯಾದವು ಆ ನೋವಿಗೆ ಹೃದಯ ವೀಣೆ ಜೋಗುಳವಾಗಿ ಹಾಡುತ್ತಿತ್ತು ಬಹಳ ಸುಂದರವಾದ ವರ್ಣನೆ ಸಹಜವಾಗಿ ಮೂಡಿ ಬಂದಿದೆ. *ಖುತುಮಾನಗಳಿಗೊಂದು ಪತ್ರ* *ಇಬ್ಬನಿಯ ಹಿಗ್ಗಿನಲಿ ತೇಲುವ ಕರುಳ ಕುಟುಕಿನ ಜೋಳದ ಕುಡಿ ನಾನು**ಮುಸುಕದಿರಿ ಸಂತತಿಯ ಬೀಜ ನೆಲದ ತೇವ ಹಿಡಿದಾಡಿಸುವ ಕಾಲ* ಪ್ರತಿ ಅಣುರೇಣು ಕೂಡಾ ಸಂತೋಷದಲ್ಲಿ ತೇಲುವ ಸಮಯದಲ್ಲಿ ಸ್ವಲ್ಪವಾದರೂ ಆಶೆಯ ಭಾವನೆಗಳನ್ನು ಹೊಂದಿರುತ್ತದೆ, ಜೀವ ಸಂತತಿಯ ಹಾಳು ಮಾಡದಿರಿ ನೆಲದ ಋಣವ ತೀರಿಸಲು ಬಿಡಿ ಎಂದ ಆರ್ಥಾನಾದ ಭಾವ ಬಹುತೇಕ ಇವರ ಗಜಲ್ ಗಳಲ್ಲಿ ಕಾಣಬಹುದು ‌. *ಕತ್ತಲಿನಾಚೆ* *ಪ್ರೀತಿ ಗೆಲ್ಲದ ಪದಗಳು ಎಷ್ಟು ಹಾಡಿದರೇನು ! ಬೆಳಕಿನಾಚೆ**ಎದೆಗೆ ನಾಟದ ಧರ್ಮಗಳ ಎಷ್ಟು ಹುಡುಕಿದರೇನು ಕತ್ತಲಿನಾಚೆ‌* ಹೃದಯಗಳ ಭಾಷೆಯನ್ನು ಅರಿತು ಪ್ರೀತಿಯಿಂದ ಜಗವ ಗೆಲ್ಲಬೇಕು ಆ ಪದಗಳು ಪ್ರೀತಿಯಿಲ್ಲದ ಮೇಲೆ ಹೇಗೆ ಹುಟ್ಟುತ್ತವೆ ಎಂಥಾ ಮಾತು ಈ ಸಾಲು ನಾಡಿನ ಹಿರಿಯ ಕವಿಯಾದ ಡಾ | ಜಿ.ಎಸ್.ಶಿವರುದ್ರಪ್ಪ ಕವಿತೆ ನೆನಪಿಗೆ ಬಂತು.ಎದೆಯಲ್ಲಿ ಪ್ರೀತಿಯನ್ನು ನಾಟದ ಧರ್ಮ ಇದ್ದರೆಷ್ಟೊ ಬಿಟ್ಟರೆಷ್ಟೊ ! *ಪ್ರೀತಿ ಬಟ್ಟಲು* *ಫಲವತ್ತಾದ ಪೈರನು ಬೆಳೆದ ರಾಶಿಯಾದ ಕೈಗಳು**ಹುತ್ತದ ಬಳ್ಳಿಯಲ್ಲಿ ಒಡಲ ಸವಿಗಾಗಿ ತಡಕಾಡಿದವು* ರೈತ ತನ್ನ ನೆಲದವ್ವನ್ನು ಪ್ರೀತಿಯಿಂದ ಬೆಳೆಗಳನ್ನು ಬೆಳೆದು ಜಗಕ್ಕೆ ಅನ್ನವನ್ನು ನೀಡಿದ ಕೈಗಳು ಇಂದು ಆಧುನಿಕ ಕಾಲದ ವಿಷಪೂರಿತ ಕ್ರಿಮಿನಾಶಕಗಳ ಹಾವಳಿ,ನೀರಿಲ್ಲದೆ ಒಣ ಭೂಮಿಯಲ್ಲಿ ನಾಳೆಯ ಕಾಳಿಗಾಗಿ ಪರಿತಪಿಸುವ ಕಾಲ ಬಂದಿದೆ. *ಕುರಿ ಕಾಯುವ ನನ್ನೊಳಗ* *ನೇಗಿಲ ಹೂಡೋ ನನ್ನೊಳಗೆ ನೀನು ಹದವಾದ ಮಣ್ಣಿನ್ಹಂಗ**ನೆಲಕ್ಕುರುಳೋ ಎಲೆಗಳ ದನಿಯಲಿ ಹೊಸ ಚಿಗುರಿನ ನೆಲೆಯ್ಹಂಗ* ಈ ಷೇರ್ ಗಮನಿಸಿದಾಗ ನೇಗಿಲಯೊಳಗೆ ಅಡಗಿದೆ ಕರ್ಮವೆಂಬ ಕುವೆಂಪು ನೆನಪಿಗೆ ಬರುತ್ತದೆ.ಬದುಕಿನ ಬಹು ಪಾಲು ನಾವು ಮಣ್ಣಿನೊಂದಿಗೆ ಕಲಿಯಬೇಕು ಅವಳು ಹದಭರಿತವಾದ ಮಣ್ಣು ಎಂಬ ಹೋಲಿಕೆ ಸಹಜವಾಗಿದೆ.ಹೊಸ ಬೆಳಕಿನಲಿ ಜೀವನದಲಿ ನೆಲಕ್ಕೆ ಎಲೆಗಳು ಉರುಳಿ ಮರಳಿ ನೆಲದ ಋಣವನ್ನು ತೀರಿಸಬೇಕು,ಮತ್ತೆ ಹುಟ್ಟುವ ವಸಂತ ಚಿಗುರಿನ ನೆಲೆಯ್ಹಂಗ ಬಹಳ ಮಾರ್ಮಿಕವಾದ ಸಾಲುಗಳು. *ನೆಲದ ಮಾತಾಗಿ ಉಳಿದವು* *ಅಲೆಯ ಬಡಿತಗಳ ಅರಗಿಸಿ ಮುತ್ತುಗಳ ದನಿಯಾತು ಬೆವರು**ಹಜ್ಜೆಗಳ ಸವೆತ ಉಂಡ ರಸ್ತೆಗಳು ದೀಪಗಳ ನೆರಳಾಗಿ ಉಳಿದವು* ಕಷ್ಟಕಾರ್ಪಣ್ಯಗಳನ್ನು ನುಂಗಿದ ಜೀವ ಮುಂದೊಂದು ದಿನ ಸಿಹಿಯಾದ ಸವಿಗಳಿಗೆ ಅನ್ನು ಸವಿಯಬಲ್ಲದು ಅದರಂತೆ ಇಟ್ಟ ಹೆಜ್ಜೆ ಹೋರಾಟದ ಬದುಕಿನಲ್ಲಿ ಕಳೆದು ಹೋದ ದಿನಗಳಲ್ಲಿ ಆ ರಸ್ತೆಗಳೇ ಮುಂದೆ ನಿನಗೆ ದಾರಿದೀಪವಾಗಿ ಬೆಳಗಬಲ್ಲ ವೆಂಬ ಶ್ರಮಿಕರ ದಮನಿತರ ನುಡಿ ಈ ಸಾಲಿನಲ್ಲಿ ಕಾಣಬಹುದು. ಅವರ ಗಜಲ್ ಗಳನ್ನು ಗಮನಿಸುತ್ತಾ ಹೋದರೆ ಬಹುತೇಕ ಗಜಲ್ ಗಳು ತನ್ನ ಸುತ್ತಮುತ್ತಲಿನ ಅನುಭವಿಸಿದ ನೆಲಮೂಲದ ಅನುಭವಗಳ ಕಟ್ಟಿಕೊಟ್ಟ ಗಜಲ್ ಸಂಕಲನ ಎಂದು ಹೇಳಬಹುದು ಆದರೆ ಈ ಗಜಲ್ ಸಂಕಲನದಲ್ಲಿ 35 ಗಜಲ್ ಗಳು ಒಳಗೊಂಡಿವೆ. ಆದರೆ ಕವಿ ಏಕೋ ಒಂದೇ ಬಗೆಯ ಪ್ರಕಾರಕ್ಕೆ ಸೀಮಿತಗೊಂಡಂತೆ ಚೌಕಟ್ಟನ್ನು ಹಾಕಿಕೊಂಡಿದ್ದಾರೆ ಎಂದು ನನಗನಿಸುತ್ತದೆ.ಇವರ 30 ಗಜಲ್ ಗಳು ಮುರದ್ದಪ್  ಗಜಲ್ ಗಳಾಗಿದ್ದು ,ಉಳಿದ 5 ಗಜಲ್ ಗಳು ಗೈರಮುರದ್ದಪ್, ಒಟ್ಟಾರೆಯಾಗಿ ಒಂದೇ ಪ್ರಕಾರದ ಗಜಲ್ ಪುಸ್ತಕ ಮಾಡಿದ್ದರೆ ಓದುಗರಿಗೆ ಇನ್ನೂ ಚೆನ್ನಾಗಿತ್ತೇನೋ ಓದಿದಾಗ ಅನಿಸಿದ ಭಾವನೆ. *ಗಜಲ್ ಗಳೆಂದರೆ ಹಾಡುಗಬ್ಬ* ಸುಲಭವಾಗಿ ಹಾಡಿ ಅವುಗಳು ನಮ್ಮ ಮನವನ್ನು ತನಿಸಿ ಮತ್ತೆ ಮತ್ತೆ ನಮ್ಮೊಳಗೆ ಧ್ಯಾನಿಸುವಂತೆ ಮಾಡಬೇಕು ಇವರ ಬಹುತೇಕ ಗಜಲ್ಗಳು ಹಾಡಲು ಬರುವುದಿಲ್ಲ ,ಆದರೆ ಭಾವನೆ ತೀವ್ರತೆ, ಅಭಿವ್ಯಕ್ತಿ ಉತ್ಪ್ರೇಕ್ಷೆ ಎಲ್ಲವನ್ನು ಸೇರಿಸಿ ಒಂದು ಕ್ಷಣ ನಮ್ಮೊಳಗೆ ಅವುಗಳನ್ನು ಚಿಂತಿಸುವ ಪ್ರಯತ್ನ ಮಾಡಿದ್ದಾರೆ. ಇವರ ಗಜಲ್ಗಳು ಕಂಡಂತೆ ಕಾಫಿಯಾ ಮತ್ತು ರದೀಪ್ ಬಹಳ ಉದ್ದನೆಯ ಸಾಲುಗಳನ್ನು ಒಳಗೊಂಡಿವೆ , ರದೀಪ್ ಮತ್ತು ಕಾಫಿಯಾ ಕೇಳಿದ ತಕ್ಷಣ ವ್ಹಾ ಎನ್ನುವ ಉದ್ಗಾರ ನಮ್ಮೊಳಗೆ ಪ್ರಜ್ವಲಿಸಬೇಕು.ಆ ರೀತಿಯಲ್ಲಿ ಸಮ ಸಾಲುಗಳುಳ್ಳ ಸರಳ ಪದಗಳನ್ನು ಬಳಸಿದರೆ ಇನ್ನೂ ಚೆನ್ನಾಗಿರುತ್ತದೆಯೆಂದು ಹೇಳಬಹುದು. ಕವಿಯು ಹೊಲ, ರೆಂಟೆ,ಕುಂಟೆ, ಮಣ್ಣು ,ಎಲೆ, ಬೀಜ, ಕಣ್ಣು, ಹೀಗೆ ಇತ್ಯಾದಿ ಪದಗಳ ಸುತ್ತಲೂ ಗಜಲ್ ಗಳು ಗಿರಕಿ ಹೊಡೆದುವೆಂಬ ಭಾವನೆ ವ್ಯಕ್ತವಾಗುತ್ತದೆ , ಹಲವು ಕಡೆ ಬಳಸಿದ ಪದಗಳೇ ಪದೇಪದೇ ಪುನರ್ ಬಳಕೆಯಾಗಿವೆ.ಇಂಥ ಕಡೆ ಸ್ವಲ್ಪ ಗಮನಿಸಬೇಕೆಂಬ ಗಜಲ್ ಓದುಗನಾಗಿ,ಗಜಲ್ ಕೇಳುಗನ ವಿನಂತಿ. ಹೀಗೆ ಇವರ ಗಜಲ್ ಸಂಕಲನವನ್ನು ಗಮನಿಸಿದಾಗ ಚಂದನೆಯ ಮುಖಪುಟ ಗಜಲ್ ಗಳಿಗೆ ತಕ್ಕ ಹಾಗೆ ಇರುವ ರೇಖಾ ಚಿತ್ರಗಳು. ಗಜಲ್ ನ ಮೂಲ ಆಶಯವನ್ನು ಕನ್ನಡೀಕರಿಸುವುದು ಬಹಳ ಕಷ್ಟದ ಕೆಲಸ ಆದರೂ ಕವಿವರ್ಯ ಬಹಳ ಜಾಣ್ಮೆಯಿಂದ ಜನಪದಿಯ ಶೈಲಿಯಲ್ಲಿ ಆಡುಮಾತಿನಲ್ಲಿ, ಇವರ ಗಜಲ್ ಕಟ್ಟುವಗಾರಿಕೆ ವಿಸ್ಮಯಗೊಳಿಸುತ್ತದೆ, ನಿತ್ಯ ಬದುಕಿನ ಪ್ರೀತಿಯ ಹುಡುಕಾಟ ನೆಲದ ಮೇಲಿರುವ ಅದಮ್ಯ ಪ್ರೀತಿ,ಕೆಲವು ಕಡೆಗೆ ಮತ್ಲಾ ಮಕ್ತಾ ಸೂಜಿಗಲ್ಲಿನಂತೆ ಗಮನ ಸೆಳೆದು ನಿಲ್ಲಿಸಿಬಿಡುತ್ತದೆ, ಹಿರಿಯರು ಹೇಳಿದಂತೆ ಅನುಭಾವದಲ್ಲಿ ಅಮೃತವೂ ತುಂಬಿರುತ್ತದೆ ಹಾಗೆ ತತ್ವಪದಗಳಲ್ಲಿ,ವಚನಗಳ ಆಗಲಿ, ಸೂಫಿ ಸಾಹಿತ್ಯ,ಹೀಗೆ ಎಲ್ಲವೂ ಆ ಕಾಲಘಟ್ಟದ ನಡುವೆ ನಮ್ಮ ನೆಲವನ್ನು ಒಂದು ಕ್ಷಣ ಮಂತ್ರಮುಗ್ಧ -ರನ್ನಾಗಿ ಆಗಿನ ವ್ಯವಸ್ಥೆಯನ್ನು ಬಿಂಬಿಸುತ್ತದೆ, ಇವರು ಕೂಡ ತಮ್ಮ ಸುತ್ತಲಿನ ಪರಿಸರವನ್ನು ಬಿಂಬಿಸಿ ಗಜಲ್ ಮೂಲಕ ಪುಸ್ತಕವನ್ನು ಸಾಹಿತ್ಯಲೋಕಕ್ಕೆ ನೀಡಿದ್ದಾರೆ ನಮ್ಮೆಲ್ಲರನ್ನು ಹೊಸ ಬಗೆಯ ಒಳನೋಟವನ್ನು ಇಣುಕಿ ಇಣುಕಿ ನೋಡುವಂತೆ ಈ ಪುಸ್ತಕವು ಮಾಡುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ.ಪುಸ್ತಕ ಬಹಳ ಆಕರ್ಷಕವಾಗಿದೆ ಜೊತೆಗೆ ಬಳಸಿದ ಕಾಗದಗಳು ಮತ್ತು ಮುದ್ರಣವನ್ನು ಸುಂದರವಾಗಿ ಮಾಡಿದ್ದಾರೆ,ಅವರಿಗೂ ಪ್ರೀತಿಯ ಸಲಾಂ. ಹೊಸ ಪುಸ್ತಕಗಳು ಬಂದಾಗಲೆಲ್ಲ ಆ ಪುಸ್ತಕವನ್ನು ಕೊಟ್ಟು ಓದಿನ ರುಚಿ ಹಚ್ಚುವ ಬೆನ್ನುಬಿದ್ದು ಅದರ ಬಗ್ಗೆ ಟಿಪ್ಪಣಿ ಬರೆಸುವ ಕಥೆಗಾರರಾದ ಅನಿಲ್ ಗುನ್ನಾಪೂರ ಅವರಿಗೆ ಪ್ರೀತಿ ಪೂರ್ವಕವಾದ ಧನ್ಯವಾದಗಳು. ಪುಸ್ತಕದ ಹೆಸರಿನಲ್ಲಿಯೂ ಕೂಡ ವಿಸ್ಮಯ ಅಲೆವ ನದಿ* ಈ ಪುಸ್ತಕವನ್ನು ನೀವುಗಳು ಕೊಂಡು ಓದಿ ನಿಮಗೂ ಕೆಲವು ಬದುಕಿನ ಅಲೆದಾಟದ ಚಿತ್ರಣವು ದೊರಕುತ್ತದೆ ಎಂದು ಹೇಳಬಹುದು, ಸಾಹಿತ್ಯಲೋಕಕ್ಕೆ ಈ ರೀತಿಯ ಇನ್ನೂ ಹೆಚ್ಚಿನ ಪುಸ್ತಕಗಳು ವಿಭಿನ್ನವಾಗಿ ಕಿರಸೂರ ಗಿರಿಯಪ್ಪನವರಿಂದ ಬರಲಿ ಎಂದು ಶುಭ ಹಾರೈಸುತ್ತೇನೆ  **************************************** ಮುತ್ತು ಬಳ್ಳಾ ಕಮತಪುರ

ಪುಸ್ತಕ ಪರಿಚಯ Read Post »

ಅನುವಾದ

ವೈನ್ ಇಲ್ಲವೇ ಇಲ್

ಅನುವಾದಿತ ಕವಿತೆ ವೈನ್ಇಲ್ಲವೇಇಲ್ಲ ರಘುಪತಿ ಸಹಾಯ್ ಫಿರಾಖ್ ಗೋರಖ್ ಪುರಿ ಕನ್ನಡಕ್ಕೆ : ಆರ್.ವಿಜಯರಾಘವನ್ ಆಮಿಶಕ್ಕೊಳಪಡುವ ಖಾಲಿಯಾಗದ ಯಾವ ಮಧುವೂ ಇಲ್ಲಓ, ಹೂಬಿಡುವ ನಾರ್ಸಿಸಸ್ಸನ ನೋಟವೇ! ನಿನಗೆ ಯಾವ ಪ್ರತಿಸ್ಪರ್ಧಿಯೂ ಇಲ್ಲ. ನರಕಸದೃಶ ಸ್ಥಿತಿಯಲ್ಲಿರುವವನು ಸಂಪೂರ್ಣವಾಗಿ ಅಂಥ ಸ್ಥಿತಿಯಲ್ಲಿಲ್ಲಇದು ನರಕಗಳು ವಿಧಿಸಿದ ಶಿಕ್ಷೆ. ಆ ಶಿಕ್ಷೆ ಬಂದುದು ಪ್ರಿಯಕರನಿಂದ ಅಲ್ಲ ಪ್ರತಿ ಅಣುವೂ ನಿದ್ರಿಸದಿರುವ ನಿಶೆಯೇ ಇಂದಿನಿರುಳುನಾಳೆ ಒಂದು ಕ್ರಾಂತಿ ನಡೆಯಲಿದೆ, ಭೂಮಿ ಎಚ್ಚರದಿಂದಿದೆ ಜೀವನವು ನೋವಾಗಿ ಬದಲಾಗುತ್ತಲೇ ಇದೆ. ಈಗ ಏನಾಗಲಿದೆ?ಈಗ, ಆ ನೋಟ, ಪ್ರಾರ್ಥನೆಗಳಿಂದ ಯಾವುದೇ ಪ್ರಯೋಜನವಾಗದಿದೆ ಕಾರವಾನಿಗೆ ಚಂಡಮಾರುತ, ಗುಡುಗು ಮಿಂಚಿನ ಸೂಚನೆಗಳಿವೆಸಾವಿನ ಆತಂಕಗಳು ಅದರ ಮೇಲೆ ಯಾವುದೇ ನಿರ್ಬಂಧ ಹೇರದಿದೆ ಮಧು ಮತ್ತಿನೌಷಧಗಳ ಭಾರವಿರದಿಹ ಮಧುಶಾಲೆಗಳೆಲ್ಲಿಹವು?ವಿಶ್ವದ ಪಾರಮೇರೆಯ ಮೇಲೆ ಹರಡದಿರುವುದು ಒಂದು ಮೋಡವಲ್ಲದಿದೆ. ನಿನ್ನ ಪ್ರೀತಿ ನೀನೆಣಿಸಿದಂತೆ ಅಷ್ಟೊಂದು ಕೆಟ್ಟದ್ದಲ್ಲಅದಕ್ಕೆ ನೆಲವಿದೆ ಗಗನವಿದೆ ಅದು ವಿಶ್ವವನೆ ಹೊಂದಿದೆ ನನ್ನ ನಂಬಿಕೆ “ವಿಶ್ವದ ವಿರುದ್ಧ ಸ್ವರ್ಗ”ನಾನು ಪ್ರತಿಫಲವ ಬಯಸುತ್ತಿಲ್ಲ ದೇವರಿಗೆ ವಂದನೆಯಿದೆ ಯಾವಾಗಿನಿಂದ ಆ ಒಂದು ಗುರಿಯಲ್ಲಿ ದುಃಖದ ಕಾರವಾನ್ನಿಂತಿದೆ?ಯಾವಾಗಿನಿಂದ ಕ್ರಾಂತಿಯು ಕಾಲದ ಸಹ-ಪ್ರಯಾಣಿಕನಾಗದೆ ಉಳಿದಿದೆ? ಚಿಂತೆಬೇಡ! ಶತ್ರು ರುಂಡವ ಚೆಂಡಾಡಿದ ಬಳಿಕ, ಮೇಲಕ್ಕೆತ್ತಬಾರದು ಅದನ್ನುಯಾವಾಗ ತಾನೇ ಹಾರುವ ಧೂಳು ಕವಿಯ ಜೊತೆಗಾರನಾಗಿರದೆ ಉಳಿದಿದೆ? ಇಲ್ಲಿ ನಿಮ್ಮ ನೋವಿನಿಂದ ವಂಚಿತರಾದವರು ನಮಗೆಕೇಳಿಸುವ ವಿಶ್ವಪ್ರೀತಿಯ ಯಾವುದೇ ದುಃಖವನ್ನು ಹೊಂದದಿರಲಿ ಈಗಲೀಗಲೇ, ಮನುಷ್ಯನ ರಕ್ತ ನೀರಂತೆ ಹರಿಯಬಹುದುಈಗಲೀಗಲೇ ಜೀವನದ ಮುಖದಲ್ಲಿ ಹೊಳಪು ಮಾಸಬಹುದು ಪ್ರಪಂಚವ ಕುರಿತು ಪಾಪಿ ಜನಗಳು ಹೇಳುತ್ತಿದ್ದಾರೆ ಇಂತುಏರುತ್ತಿರುವ ಅಲೆ ತುಂಬಿದ ಈ ನದಿಯು ಮರೀಚಿಕೆಯಲ್ಲವೆಂದು ************************************

ವೈನ್ ಇಲ್ಲವೇ ಇಲ್ Read Post »

ಕಾವ್ಯಯಾನ

ಮರಕುಟಿಕ

ಕವಿತೆ ಮರಕುಟಿಕ ಡಾ. ಅರಕಲಗೂಡು ನೀಲಕಂಠ ಮೂರ್ತಿ ಒಂದು ಮರಕುಟಿಕ ಕುಕ್ಕುತ್ತಿದೆಕಾಯಕದಂತೆ ಕಾಯದೆಯಾರಿಗೂ ಎಡೆಬಿಡದೆಗುಕ್ಕು ಗುಕ್ಕು ಚಕ್ಕೆಯಷ್ಟೇಎಬ್ಬುತ್ತಿದೆ ಲೆಕ್ಕವಿಡದೆಮರದ ಕಾಂಡ-ಕೊಂಬೆಗಡುಸಾಗಿದೆ ವೀರ ಎದೆಯ ಹಾಗೆ! ಎಷ್ಟೊಂದು ಮರಕುಟಿಕಗಳುಬಂದು ಬಂದು ಕುಟಿಕಿ ಹೋಗಿದ್ದಾಗಿದೆಅರಿವು ಮಂಕಾಗುವಷ್ಟು ದಿನಗಳಿಂದಬರುತ್ತಲೇ ಇವೆ ಇಂದಿಗೂಸರದಿಯಲ್ಲೋಜಾತ್ರೆಯ ಜಂಗುಳಿಯಲ್ಲೋ… ಬಂದೇ ಬರುತ್ತವೆ ತಪ್ಪದೆ ಮುಂದೂ–ಮರವಿರುವಷ್ಟು ದಿನಅದರ ತಿರುಳು ತೊನೆವಷ್ಟು ದಿನಬಂದೇ ಬರುತ್ತವೆ… ಮರಕ್ಕೆ ನೋವಾಗುವುದೋ ಬಿಡುವುದೋಕುಟುಕುವ ಕೊಕ್ಕಿಗೇಕೆ ಉಸಾಬರಿ!ಕೆಲವೊಮ್ಮೆ ಮರ ಒಂದೇ…ಮರಕುಟಿಕಗಳನೇಕನೋವು ಮಾತ್ರ ನಿಶಬ್ದ ತದೇಕ!ಚಿಂತೆ ಕಂಬನಿ ಯಾರಿಗೆ…ಏಕೆ! ಮರ ಉರುಳಿ ಅಳಿದಮೇಲೆಎಲ್ಲಿಯ ಮರಕುಟಿಕಎಲ್ಲಿಯ ಕುಕ್ಕುವಿಕೆ…!

ಮರಕುಟಿಕ Read Post »

ಕಾವ್ಯಯಾನ

ಗಜಲ್

ಗಜಲ್ (ಗಾಂಧಿ:ಇನ್ನೊಂದು ನೋಟ) ಡಾ. ಗೋವಿಂದ ಹೆಗಡೆ ಚರಕ ನೂಲು ಕೋಲುಗಳಲ್ಲೇ ಅವನ ಕಂಡಿದ್ದೇವೆಕನ್ನಡಕವನ್ನು ಮರೆಯದೇ ಜೇಬಿಗೆ ಇಳಿಸಿದ್ದೇವೆ ಸ್ವರಾಜ್ಯ ಸತ್ಯಾಗ್ರಹ ಸ್ವದೇಶಿ- ದುಡಿಯುತ್ತ ಹೋದ ಅವನುನಾವು ಪುರಸೊತ್ತಾಗಿ ಕೂತು ಅವನ ಟೀಕಿಸುತ್ತೇವೆ ಒಂದೇ ಮಗ್ಗುಲ ಚಿತ್ರಗಳೆಂದರೆ ನಮಗೆ ಬಹಳ ಪ್ರೀತಿಒಂದು ಕಣ್ಣು ಮುಚ್ಚಿಯೇ ಎಲ್ಲವನ್ನೂ ಅಳೆಯುತ್ತೇವೆ ಕಪ್ಪು-ಬಿಳುಪುಗಳ ಆಚೆ ಲೋಕವೆಷ್ಟು ಸಂಕೀರ್ಣವಿದೆಕರಿಯ ಕನ್ನಡಕದಲ್ಲಿ ಕಂಡದ್ದು ಮಾತ್ರ ನಿಜವೆನ್ನುತ್ತೇವೆ ತಪ್ಪು ತೊಡರು ನೆರಳುಗಳನ್ನು ನೋಡುತ್ತ ನೀಡಿ ತೀರ್ಪುಬೆಳಕಿನೊಡನೆಯ ಮುಖಾಮುಖಿಗಳ ಬೇಕೆಂದೇ ಮರೆಯುತ್ತೇವೆ ಸಂಕೇತ-ಸಂಗತಿ, ಭಜನೆ-ಭಂಜನೆಗಳಲ್ಲಿ ನಮ್ಮ ನಡೆ ‘ಜಂಗಮ’ನಮ್ಮ ನಮ್ಮ ಅಳತೆಗೋಲುಗಳಲ್ಲೇ ಅವನ ಮಥಿಸುತ್ತೇವೆ *********************************

ಗಜಲ್ Read Post »

ಕಾವ್ಯಯಾನ

ದ್ವಿಪದಿಗಳು

ದ್ವಿಪದಿಗಳು ವಿ.ಹರಿನಾಥ ಬಾಬು ಯಾರನ್ನಾದರೂ ಏನ ಕೇಳುವುದಿದೆ?ಕೇಳಲು ಉಳಿದಿರುವುದಾದರೂ ಏನು ನೀನೇ ಇಲ್ಲದ ಮೇಲೆ! ಹತ್ತು ದಿಕ್ಕಿಗೂ ಹುಡುಕಾಡಿದೆ ಹುಚ್ಚನಂತೆಹಿಡಿದ ಹುಚ್ಚು ಮತ್ತಷ್ಟು ಗಟ್ಟಿಯಾಯಿತು ನೀ ಕಾಣದೆ ಎದುರಾದವರೆಲ್ಲಾ ದಿಟ್ಟಿಸಿ ನೋಡಿ ಹೋಗುತ್ತಿದ್ದಾರೆನೀನು ನನ್ನ ಕಣ್ಣೊಳಗೇನಾದರೂ ಅವಿತುಕೊಂಡಿರುವೆಯಾ?? ರೆಪ್ಪೆ ಮುಚ್ಚಿದರೆ ಕಡಲು ಉಕ್ಕಿ ಹರಿವುದುಹಾಯಿ ದೋಣಿಯ ಬಟ್ಟೆ ಆಕಾಶವ ಹೊದ್ದಿದೆ ಮರಗಿಡಗಳೂ ಮೌನ ತಾಳಿವೆಜೀವವಿರದ ಈ ದೇಹ ದಿಗಿಲುಗೊಂಡಿದೆ ಬೆಳ್ಳಕ್ಕಿ ಯಾಕೋ ಮುಗಿಲಕಡೆ ನೋಡುತಿದೆಈಗತಾನೇ ನೀನು ನಭಕೆ ಹಾರಿಕೊಂಡಂತೆ ಕಾಣುತಿದೆ ಒಂಟಿತನಕೆ ಯಾಕಿಷ್ಟು ಆತಂಕ?ನೀನು ಕೊಟ್ಟ ಪ್ರೀತಿಯ ಸವಿಮುತ್ತು ಇದ್ದ ಕಾಲಕ್ಕ ಹಗಲನೇಗೋ ಕಳೆದುಬಿಡುವೆ ಬೆಳಕಿನ ಜೊತೆಗೂಡಿಇರುಳು ನಿನ್ನ ನೆನಪ ಹೆಣವ ತಂದು ಸುರಿಯುತಿದೆ ಅಂಗಳಕೆ ನೀನಲ್ಲದೆ ಚಂದಿರ ಉರಿವ ಸೂರ್ಯನಿಗೂ ಮಿಗಿಲಾಗಿರುವಅವನ ಬೆಳದಿಂಗಳ ಬೆಂಕಿ ಕನಸುಗಳ ಸುಟ್ಟು ಕೇಕೆ ಹಾಕಿದೆ **********************************

ದ್ವಿಪದಿಗಳು Read Post »

ಕಾವ್ಯಯಾನ

ಪ್ರತಿಷ್ಠೆ ಬದಿಗಿಟ್ಟರೆ ಬಾಳು

ಕವಿತೆ ಪ್ರತಿಷ್ಠೆ ಬದಿಗಿಟ್ಟರೆ ಬಾಳು ಲಕ್ಷ್ಮೀದೇವಿ ಕಮ್ಮಾರ ಮನೆ ಮಿಡಿದರೂ ಪ್ರತಿಷ್ಟೆ ಗಡಿಅಡ್ಡಿಯಾಗಿದೆ ನನಗೂ ನಿನಗೂ ಅಕ್ಕಪಕ್ಕದ ಲ್ಲಿದ್ದರೂ ಅಹಂನ ಅಡ್ಡಗೋಡೆ ಅರಿಯಲಾರೆ ನನ್ನ ನೀನು ,ನಿನ್ನ ನಾನು ಬೇಕು ಬೇಕೆನಿಸಿರೂ ಸಾಕು ಮಾಡಿದ್ದೆವೆ ಮಾತುಕುಹಕಿಗಳಿಂದಾಗಿದೆ ಬಿರುಕುಒಡೆದು ಹೋಗುತ್ತಿದೆ ಪ್ರೀತಿ ಸೇತು ಒಲವದಾರೆ ಹರಿಸಲು ಬಂದುದರ ಕುರುಹುಅರಿಯದೆ ನಮ್ಮ ಸ್ವಾರ್ಥದ ಪರದಿಯಲಿ ಬಂದಿಯಾಗುಳಿದವರು ನಾವು ***********************************

ಪ್ರತಿಷ್ಠೆ ಬದಿಗಿಟ್ಟರೆ ಬಾಳು Read Post »

You cannot copy content of this page

Scroll to Top