ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಗಝಲ್

ಗಝಲ್ ರತ್ನರಾಯ ಮಲ್ಲ ಸಿದ್ಧಾಂತಗಳು ಕಚ್ಚಾಡಿದರೆ ಮತ್ತೆಂದಿಗೂ ಹತ್ತಿರವಾಗಲಾರವುವಾಸನೆಗಳು ಬಡಿದಾಡಿದರೂ ಯಾವತ್ತೂ ದೂರವಾಗಲಾರವು ಜಗಳವು ಸಾಗುತ್ತಿದೆ ಅಲ್ಲಿ ಜೋರಾಗಿ ನಿನ್ನ ಮನ ಕಲುಕುವಂತೆನ್ಯಾಯ ಹುಡುಕುವ ಮನಗಳು ನೆಮ್ಮದಿಯಿಂದ ಬಾಳಲಾರವು ಮೂರನ್ನು ತೊರೆಯುವುದೆ ಇಂದು ಸೌಹಾರ್ದದ ರೂಪ ತಾಳಿದೆಕೈ-ಕಾಲುಗಳು ಹಿಡಿಯದ ಪ್ರತಿಭೆಗಳಿಗೆ ಪ್ರಚಾರ ಮುತ್ತಿಕ್ಕಲಾರವು ಕಸ ಗುಡಿಸುವ ಹುಚ್ಚು ಭ್ರಮೆಯಲ್ಲಿ ಕಸಬರಿಗೆ ಆಗದಿರು ನೀನುಸುಂದರ-ಉತ್ತಮ ಪೊರಕೆಗಳೂ ಸಹ ಪೂಜೆಗೆ ಒಳಗಾಗಲಾರವು ವೈಯಕ್ತಿಕ ಗಟ್ಟಿ ಹೆಜ್ಜೆಯೂರಬೇಕು ನಿಸ್ವಾರ್ಥದ ನೆಲೆಯಲ್ಲಿ ಇಲ್ಲಿಚೂರಿ ಹಾಕಿದ ಹೃದಯಗಳು ‘ಮಲ್ಲಿ’ ಎದೆಯಲ್ಲಿ ಉಳಿಯಲಾರವು ************************************

ಗಝಲ್ Read Post »

ಕಾವ್ಯಯಾನ

ಸಾಧ್ಯವಾದರೆ ಕಲಿ

ಕವಿತೆ ಸಾಧ್ಯವಾದರೆ ಕಲಿ ಪ್ರತಿಮಾ ಕೋಮಾರ ಈರಾಪುರ ಹೌದು ನಾನು ಬರೀ ಇರುವೆನನ್ನಾಕಾರ,ಗಾತ್ರ,ಬಣ್ಣನೋಡಿನನ್ನೆಳೆಯದಿರು ಮನವೆನನ್ನ ಹೊಸಕದಿರುಸಾಧ್ಯವಾದರೆ ಕಲಿನನ್ನ ಸಂಘ ಜೀವನತುಸುವಾದರೂಹಂಚಿ ತಿನ್ನುವ ಉದಾರತೆ ನೀ ಕೊಡುವ ಪ್ರತೀತುತ್ತಿಗೂ ನಾನು ಋಣಿನಿನ್ನ ಮನೆ ಮೂಲೆಯೇಎನ್ನ ಸಾಮ್ರಾಜ್ಯನೀ ತೋರುವ ಹನಿ ಪ್ರೀತಿಗೆದುಪ್ಪುಟ್ಟು ಸೇರಿಸಿಕೊಡುವೆ ಪ್ರೀತಿಸಾಧ್ಯವಾದರೆ ಕಲಿಉಂಡ ಮನೆಗೆ ದ್ರೋಹ ಬಗೆಯದನನ್ನ ಪ್ರಾಮಾಣಿಕತೆ ನೀ ಬತ್ತಿಯಿಟ್ಟು ತೈಲವೆರೆದುಉರಿಸುವ ಹಣತೆ ನಾನುನಾ ಕತ್ತಲೆಯಲ್ಲುಳಿದರೂನೀಡುವೆ ನಿನಗೆ ಬರೀಬೆಳಕುಸಾಧ್ಯವಾದರೆ ಕಲಿಬೆಳಕ ನೀಡಿದವರಬದುಕ ಬೆಳಕಾಗಿಸಲುಇಲ್ಲ ಆರಿಸುವವಿಶ್ವಾಸ ದ್ರೋಹವಾದರೂಮಾಡದಿರು ಹಣ್ಣು ಹೇಗಿದ್ದರೂಬರೀ ಸವಿಯನ್ನಷ್ಟೇಕುಕ್ಕಿ ಹೀರಿಖುಷಿಪಡುವುದು ಹಕ್ಕಿಸಾಧ್ಯವಾದರೆ ಕಲಿಒಂದು ಕೆಟ್ಟದ್ದನ್ನೇಕೆದಕಿಕೂಗಿ ಹೇಳುವ ಬದಲುಸಾವಿರ ಒಳ್ಳೆಯದಕಂಡು ಕಲಿತುಖುಷಿಪಡುವ ಉದಾತ್ತತೆ **************************

ಸಾಧ್ಯವಾದರೆ ಕಲಿ Read Post »

ಆರೋಗ್ಯ

ಮೊದಲ ಬಾರಿ ಪೇಯಿಂಗ್ ಗೆಸ್ಟ್ ಆಗಿ ಹೋದಾಗ

ಅನುಭವ ಮೊದಲಬಾರಿಪೇಯಿಂಗ್ ಗೆಸ್ಟ್ಆಗಿಹೋದಾಗ      ಬೆಂಗಳೂರಿಗೆ ಹೋಗಿ ಬಂಧುಗಳ ಮನೆಯಲ್ಲಿ  ಬಂಧುಗಳ  ಹಾಗೆ ಒಂದೆರಡು ದಿನ ಇದ್ದು ಬರುವುದು ಬೇರೆ ವಿಚಾರ !ಅದೇ ನಮ್ಮ ಕೆಲಸಕ್ಕೆ ಹೋಗಿ ಇರುವುದು ವೆರಿ ಹಾರಿಬಲ್‌! ಯಾರಿಗೂ ಇರಿಸು ಮುರಿಸು ಬೇಡ ಎಂಬ ಕಾರಣಕ್ಕೆ ಸಾಧನಾಕಾಂಕ್ಷೆಗಳ ಅರ್ಥಾತ್ ಉದ್ಯೋಗಾಕಾಂಕ್ಷೆಗಳು,. ಸ್ಪರ್ಧಾಕಾಂಕ್ಷಿಗಳು ಏನೇ ಕರೆಯಲಿ ಅವರ ಮುಂದಿನ ಆಯ್ಕೆ ಪಿಜಿ.  ಪಿಜಿ ಅಂದರೆ  ‘ಪೇ’ ಮಾಡಿ ‘ಗೆಸ್ಟ್’ ಆಗಿರಿ ಅಂತ ಅಲ್ಲ ಪೇ ಮಾಡಿ  ಪೇನ್ಫುಲ್ ಅಡ್ಜಸ್ಮೆಂಟ್ ಮಾಡಿಕೊಂಡಿರಿ ಎಂದರ್ಥ. ಅತ್ತೆ ಮನೆಯ ಝಲಕ್‌ಗಳನ್ನು ಅಂದರೆ ಅತ್ತೆ ಮನೆಯಲ್ಲಿ ಎದುರಾಗಬಹುದಾದ ಸಮಸ್ಯೆಗಳನ್ನು ರಿಯಲ್ ಡೆಮೊ ಕ್ಲಾಸ್‌ಮಾಡಿ ತೋರಿಸಿ ಬಿಡುತ್ತಾರೆ  ಕೆಲವೊಮ್ಮೆ ಪಿಜಿ ಸುಂದರಿಯರು ಎದ್ದರೆ ಕಾಲು ಹಿಡಿಯುತ್ತಾರೆ ಬಗ್ಗಿದರೆ ಜುಟ್ಟು ಹಿಡಿಯುತ್ತಾರೆ ಅಂತರಲ್ಲ ಹಾಗೆ ಮುಖ ನೋಡಿ ವ್ಯವಹರಿಸುತ್ತಾರೆ. ನಮಗೆ ಪ್ರತಿಸ್ಪರ್ಧೆ ಒಡ್ಡುತ್ತಾರೆ ಎಂದು ಗೊತ್ತಾಗಿಬಿಟ್ಟರೆ ಚಿತ್ರ-ವಿಚಿತ್ರವಾಗಿ ವರ್ತಿಸುತ್ತಾರೆ. ಆದರೆ ನನಗೆ ಸಿಕ್ಕಿದ ರೂಮ್ಮೇಟ್ ಸ್ಮಿತಳ ಹಾಗೆ ಸದ್ಭಾವದವರೂ ಖಂಡಿತಾ ಇರುತ್ತಾರೆ ಹೇಗಾದರೂ ಮಾಡಿ ಕೆ.ಎ.ಎಸ್. ಪಾಸು ಮಾಡಿಯೇ ತೀರುತ್ತೇನೆ ಅಂತಿದ್ದ ನಂಗೆ ಪಿಜಿ ಗೆ ಹೋಗಲು ಮನಸ್ಸಾಯಿತು. ಲಗೇಜ್ ಸಮೇತ ಹೊರಟೇಬಿಟ್ಟೆ.  ಜಸ್ಟ್ ಡಯಲ್‌ ಮೂಲಕ ಪಿಜಿ ಅಡ್ರೆಸ್ ಹುಡುಕಿದ್ದ ನನಗೆ ವಿಳಾಸ ಸಿಕ್ಕಿತು.  ಅದು ನನ್ನ ಪಾಲಿಗೆ “ಅಡ್ಜಸ್ಟ್ ಡಯಲ್”  ಪಿಜಿಯ ಹೆಸರು ‘ವಸಂತವಿಹಾರ’. ಅಲ್ಲಿಯ ವಾಚ್‌ಮ್ಯಾನ್ ನನ್ನನ್ನು ನೋಡುತ್ತಲೇ ಒಳಕರೆದ ನನ್ನ ತಮ್ಮ ಪೂರ್ವಾಪರ ವಿಚಾರಿಸತೊಡಗಿದ. ನಮ್ಮ ಲಗೇಜ್ ನೋಡುತ್ತಲೇ ಶಾಕ್‌ಗೆ ಒಳಗಾಗಿದ್ದ ಅವನು ನನ್ನ ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಡಲಾರದೆ ಬಾಯಿ ಮುಚ್ಚಿಸಬೇಕೆಂದು “ನಿಮ್ಮನೆ ಅಂತ ತಿಳಿದುಕೊಳ್ಳಬೇಡಿ ಇದು ಬೆಂಗಳೂರು ಅದೂ  ಪಿಜಿ…” ಅಂದುಬಿಟ್ಟ. “ಪ್ರಥಮ ಚುಂಬನA ದಂತಭಗ್ನA” ಆಯಿತು ಎಂಬ ಭಾವನೆ ನನ್ನನ್ನಾವರಿಸಿತು.      ಪಿಜಿಯ ಮ್ಯಾನೇಜರ್ ನೀಲಾದೇವಿ ಬಂದು  “ಮ್ಯಾಡಮ್” ಎಂದು ಪರಿಚಯ ಮಾಡಿಕೊಂಡು ಅಡ್ವಾನ್ಸ್ ತೆಗೆದುಕೊಂಡರು  ಅಡ್ರೆಸ್ ಫೋಟೊ ಎಲ್ಲಾ ತೆಗೆದುಕೊಂಡು “ನಮ್ಮ ಪಿಜಿ ಅಂದರೆ ಬಹಳ ಫೇಮಸ್ ಇಲ್ಲಿ ಬಂದವರಿಗೆ ಯಾರಿಗೂ ಮೋಸವಾಗಿಲ್ಲ sಸಕ್ಸಸ್ss ಅಗಿಯೇ ಇಲ್ಲಿಂದ ಕಾಲ್ತೆಗೆಯುವುದು. ನಿಮಗೂ ಶುಭಕಾಲ ಬಂದಿದೆ ಅದಕ್ಕೆ ಇಲ್ಲಿಗೆ ಬಂದಿರುವುದು” ಎಂದು ಕೊಚ್ಚಿಕೊಂಡಿದ್ದೇ ಕೊಚ್ಚಿಕೊಂಡಿದ್ದು. ನಂತರ “ನೀವು ಸ್ವಲ್ಪ ಅಡ್ಜಸ್ಟ್ ಮಾಡಿಕೊಳ್ಳಬೇಕು ಯುಗಾದಿ ಹಬ್ಬಕ್ಕೆ ವೆಕೇಟ್ ಮಾಡ್ತೀವಿ ಅಂದವರು ಇನ್ನೂ ಬಂದಿಲ್ಲ ಇನ್ನೆರಡು ದಿನದಲ್ಲಿ ಅವರು ಬರುತ್ತಾರೆ. ಅಲ್ಲಿವರೆಗೆ ಹಬ್ಬಕ್ಕೆ ಊರಿಗೆ ಹೋಗಿರುವವರ ಬೆಡ್‌ಖಾಲಿ ಇದೆ ಅದನ್ನು ಉಪಯೋಗಸಿಕೊಳ್ಳಿ” ಎಂದರು ಸರಿ! ಎಂದು ನಾನು ತಲೆಯಾಡಿಸಿದೆ ಅಲ್ಲಿಗೆ ಎರಡನೆ ದಂತಭಗ್ನವಾದAತಾಯಿತು.   ಎರಡು ದಿನ ಹೇಗೋ ಕಳೆಯಿತು ಹಬ್ಬಕ್ಕೆ ಹೋದವಳು ಮರಳಿ ಬಂದು ನನ್ನನ್ನು ನೋಡಿದ ಕೂಡಲೆ ನೀಲಾದೇವಿಯನ್ನು ಕರೆದು “ನೋಡಿ ನಮ್ಮ ರೂಂನಲ್ಲಿ ಇರೋರು ಮೂವರು ಆ ಮೂವರನ್ನು ಬಿಟ್ಟರೆ  ವಾಶ್ ರೂಮನ್ನು ಬೇರೆಯವರು ಉಪಯೋಗಿಸುವಂತಿಲ್ಲ”. ಎಂದು ಸುಟ್ಟುರಿಯುವಂತೆ ನುಡಿದಳು. ಬೇಜಾರಿನ ಮೇಲೆ ಬೇಜಾರು ಪ್ರಾರಂಭವಾಯಿತು. ಅಷ್ಟರಲ್ಲಾಗಲೇ ಅವರಿಗೆ ಜಾಗ! ಜಾಗ! ಎಂದು ಸುದ್ದಿ ಇಡೀ ಪಿ.ಜಿಯ ತುಂಬೆಲ್ಲಾ ಹರಡಿತು. ಬೃಹತ್ ಸುದ್ದಿಯೇ ಆಯಿತು ಅನ್ನಿ. ಇವತ್ತೊಂದು ದಿನ ಬಂಧುಗಳ ಮನೆಗೆ ತೆರಳಿ ಊರಿಗೆ ಹೊರಡುವ ನಿರ್ಧಾರದಿಂದ ಲಗೇಜ್ ಬ್ಯಾಗ್ ಎತ್ತಿಕೊಂಡಾಗಲೇ ಸ್ಮಿತ ನನಗೆ ಪರಿಚಯವಾದಳು. ಹುಡುಗಿ ಮಂದಸ್ಮಿತಳಾಗಿಯೇ ಬಂದು “ಎಲ್ಲಿ ಮಲಗುವಿರಿ?” ಎಂದಳು “ಗೊತ್ತಿಲ್ಲ? ಊರಿಗೋ ಕಸಿನ್ ಮನೆಗೋ ಹೋಗುವೆ” ಎಂದೆ “ನೀವು ಬಂದಿರುವುದು ಸಾಧನೆಯ ಉದ್ದೇಶದಿಂದ ಊರಿಗೆ ಹೊರಡುವುದು ಏನು ಮಾತು ಬನ್ನಿ ನನ್ನ ರೂಮಿಗೆ ಅರೆ ಏನು ನೋಡೋದು ಬನ್ನಿ…. ಬನ್ನಿ ಅಂದರೆ ಬರಬೇಕಪ್ಪ” ಎಂದು ನನ್ನನ್ನು ಅವಳ ರೂಮಿಗೆ ಕರೆದೊಯ್ದಳು.      “ನಿಮ್ಮನ್ನು ನೋಡಿದರೆ ನನಗೆ ಏನು ಏನು ಹೇಳಬೇಕೆಂದು ಗೊತ್ತಾಗುತ್ತಿಲ್ಲ ನಮ್ಮ ರೂಮು ಖಾಲಿಯಿಲ್ಲ ಅದರೆ ನನ್ನ ಗೆಳತಿ ಬೇಸಿಗೆ ರಜೆಗೆ ಊರಿಗೆ ಹೋಗಿದ್ದಾಳೆ ಅವಳ ಬೆಡ್ ನೀವು ಉಪಯೋಗಿಸಬಹುದು” ಎಂದಳು. ನನಗೆ ಏನು ಹೇಳಬೇಕೆಂದು ತಿಳಿಯಲಿಲ್ಲ.  ಒಡಹುಟ್ಟಿದವರಿಗಿಂತ ಹೆಚ್ಚಾಗಿ ಪ್ರೀತಿ ತೋರಿಸಿದಳು.      ಎಷ್ಟು ಆತ್ಮೀಯತೆ ಎಂದರೆ ಇವತ್ತಿಗೂ ನೆನೆಸಿಕೊಂಡರೆ ಕಣ್ಣಾಲಿಗಳು ತೇವಗಟ್ಟುತ್ತವೆ. ಪರಿಚಯ ಗಾಢವಾದಂತೆ ಒಂದೇ ಊರಿನವರು ಎಂದು ಗೊತ್ತಾಯಿತು. ಕಣ್ಣರಿಯದಿದ್ದರೂ ನಮ್ಮ ಕೊರಳ ಧ್ವನಿ ಒಂದೇ ಆದ್ದರಿಂದ ಕರುಳ ಬಳ್ಳಿಯ ಸಂಬAಧಕ್ಕಿAತ ನಮ್ಮ ಭಾಂದವ್ಯ ಹೆಚ್ಚಾಗಿಬಿಟ್ಟಿತು. ಒಂದೇ ಮಾತು ಹೇಳಿದಳು “ನೀವು ಬಂದಿರುವುದು ಉದ್ದೇಶವಿಟ್ಟುಕೊಂಡು ಉದ್ದೇಶ ಈಡೇರಿಸಿಕೊಳ್ಳಿ ಅಷ್ಟೆ” ಎಂದಳು. ಮರುದಿನ ಎದ್ದು ಸ್ನಾನ ಮುಗಿಸಿ ಕ್ಲಾಸ್‌ಗೆ ಹೊರಟೆ. ನನ್ನ ಊರಿನಿಂದ ನನ್ನೊಟ್ಟಿಗೆ ಬಂದಿದ್ದ ನನ್ನ ಜೊತೆಗಾತಿಗೆ ಆಗಲೆ ಮುಖ ಗಡಿಗೆಯಾಯಿತು! ಇಲ್ಲಿ ಬಂದರೂ ಅವರಿಗೆ ಆತ್ಮೀಯರು ಸಿಕ್ಕಿಬಿಟ್ಟರಲ್ಲ ಎಂಬ ಧಗೆ ಇತ್ತು. ಪಾಪ ಸ್ಮಿತ  ಪಿಜಿಗೆ ಬರುವಷ್ಟರಲ್ಲಿ ತಿಂಡಿ ಖಾಲಿಯಾಗಿರುತ್ತದೆಂದು ಬಾಕ್ಸ್ಗೆ ತಿಂಡಿ ತುಂಬಿಸಿಕೊAಡು ನಮ್ಮ ತರಗತಿಗೇ ತಂದುಕೊಟ್ಟಳು. ರುಚಿರುಚಿಯಾಗಿ ಮಾಡಿಕೊಂಡು ತಿಂದಿದ್ದ ನಾಲಿಗೆಗೆ ಸ್ವಲ್ಪ ಕಷ್ಟದ ದಿನಗಳೆನೇ. ಮುರಿದ ಇಡ್ಲಿ, ಸುಕ್ಕುಗಟ್ಟಿದ ದೋಸೆ, ಬಣ್ಣಕಳೆದುಕೊಂಡ ಚಿತ್ರನ್ನ, ಸೊರಗಿದ ಉಪ್ಪಿಟ್ಟು, ಬಾಡಿದ ಪಲವ್ ಇವೆ! ಹಿಡಿಸಲಿಲ್ಲ.      ನಾನು ಡಯಟ್ ಮಾಡುತ್ತಿದ್ದೇನೆ ಎಂದು ನೆಪಹೇಳಿ  ಫ್ರಷ್ ಫ್ರೂಟ್ ಜೂಸ್ ತಂದು ಕುಡಿದು ರೂಮಿನಲ್ಲಿಯೇ ಓದುತ್ತಾ ಕುಳಿತೆ.  ಅದೇ ಟೈಮ್ ಟೇಬಲ್ .  ಸಂಜೆಯ  ತರಗತಿ ಮತ್ತೆ ೪ ರಿಂದ ೬ ಗಂಟೆಗೆ, ಸರಿಯಾಗಿ ೧೨.೦೦ ೧೨.೦೫ಕ್ಕೆ ಕುಕ್ಕರ್‌ಯುವತಿ ವಿಷಲ್ ಹಾಕಿ ಹಾಕಿ ಅಡುಗೆ ಆಗುತ್ತಿದೆ ಎಂದು ಸಾರಿಸಾರಿ ಹೇಳುತ್ತಿದ್ದಳು. ಒಗ್ಗರಣೆಯ ಸದ್ದು ಅಷ್ಟೇನು ಆರ್ಭಟಿಸಲಿಲ್ಲ ! ಆಘ್ರಾಣಿಸುವಂತಿರಲಿಲ್ಲ!. ನಮಗೆ ಒಂದು ಗಂಟೆಗೆ ಊಟಕ್ಕೆ ಬನ್ನಿ ಎಂಬ ಕರೆ ಬಂತು. ಬೇರೆ ಬೇರೆ ರೂಮಿನವರೆಲ್ಲ ಊಟದ ಬಾಕ್ಸ್ಗಳನ್ನು ಲೋಟಗಳನ್ನು ಸದ್ದುಮಾಡಿಕೊಂಡು ಹೊರ ಮೆಟ್ಟಿಲಿಳಿಯುತ್ತ ಬಂದರು. ನನಗೆ ಮಜುಗರವಾಯಿತು ಅವರೆಲ್ಲ ಊಟ ತೆಗೆದುಕೊಂಡು ಹೋಗಲಿ ಎಂದು ನಿಧಾನವಾಗಿ ಹೊದೆ. ಸಾಂಬರ್ ಏನೋ ಇದೆ ಸರಿ! ಆದರೆ ಯಾವ ಎಂದು ಕೇಳುವ ಪರಿಸ್ಥಿತಿ ಬಂದೇ ಬಿಟ್ಟಿತು.   ಮೊದಲಿಗೆ ಬಂದವರ ಪಾತ್ರೆಗೆ ಇದ್ದ ಸ್ವಲ್ಪ ತರಕಾರಿಗಳು ಸೇರಿದ್ದವು.      ಸಂಜೆ  ಟೀ ಟೈಮ್ ಅಗುತ್ತಲೇ ಬೆಕ್ಕು ಕೆಡಿಸಿದ ದುರ್ನಾತ ಎಲ್ಲಾ ಕಡೆ ಹಬ್ಬಿತು ಪಿಜಿ  ಲಲನೆಯರು ಮೂಗು ಹಿಡಿದುಕೊಂಡೇ ಬೆಕ್ಕು ಕೆಡಿಸಿದ ಜಾಗ ಹುಡುಕಹೊರಟರೆ ಆ ಗಬ್ಬುನಾತ ಬರುತ್ತಿರುವುದು ಟೀ…  ಪಾತ್ರೆಯಿಂದ ಎಂದು ತಿಳಿದುಕೊಳ್ಳುವುದಕ್ಕೆ ಹೆಚ್ಚು ಸಮಯ ಹಿಡಿಯಲಿಲ್ಲ. ಕಾಫಿ ಅಭ್ಯಾಸವಿದ್ದ ನಮಗೆ ಈ ಟೀ   ಉಸಾಬರಿ ಬೇಡವೆಂದೇ ಕಾಫಿಗೆ ಅನ್ಯ ಮಾರ್ಗ ಕಂಡುಕೊAಡೆ. ತಿಂಗಳಿಗೆ ರೂ.೫೦ ಕೊಟ್ಟರೆ ಎರಡು ಗ್ಲಾಸ್ ಬಿಸಿನೀರು ಸಿಗುತ್ತಿತ್ತು ಸಂಜೆಗೆ ಸರಿ ಅಂತ ಬಿಸಿನೀರು ತಂದು ಇನ್ಸಟಂಟ್ ಕಾಫಿ ಪೌಡರ್, sಸಕ್ಕರೆ  ಮಿಲ್ಕ್ ಪೌಡರ್ ಹಾಕಿ ಕಾಫಿ Éಅರೇಂಜ್   ಮಾಡಿಕೊಂಡರೆ ನನ್ನ ಊರಿನ ಜೊತೆಗಾತಿ “ಇದು ಕಾಫಿ ತರಾನೇ ಇಲ್ಲ” ಎಂದಳು ಇನ್ನೇನು ಅವಳ ತಲೆಗೆ ಮೊಟಕುವುದೊಂದು ಬಾಕಿ ಸುಮ್ಮನಾದೆ. ಹೀಗೆ ದಿನಗಳು ಉರುಳಿದವು. ಸಂಜೆ ಹೊರಗೆಲ್ಲು ಹೋಗಲಾಗುವುದಿಲ್ಲವಲ್ಲ ಪೇರ‍್ನಂಥ  ನಂತಹ ಚಪಾತಿಗೆ  ಟಿ ಸ್ಪೂನ್ನಂಥ sಸ್ಪೂನಲ್ಲಿ  ಪಲ್ಯ ಹೆಸರುಗೊತ್ತಿಲ್ಲದ ಸಾಂಬರ್ ಸೋಡದಿಂದ ಉಬ್ಬಿದ ಅನ್ನ ನೀರ್‌ರ್ ……… ಮಜ್ಜಿಗೆ ಅನಿವಾರ್ಯವಾಗಿ ನನ್ನ ಊಟದ ಪರಿ ಅಡ್ಜಸ್ಟ್  ಆಯ್ತು.      ಒದಲು ಕುಳಿತರೆ ೯.೩೦ ರಿಂದ ೯.೪೦ರ ಒಳಗೆ ಒಳ್ಳೆಯ  ಸ್ಟಾçಂಗ್ ಕಾಫಿಯ ಮಸಾಲೆ ರೊಟ್ಟಿ ಬೇಯುತ್ತಿರುವ ಘಮಲು ಹಾಗೆ ನಾವಿದ್ದ ಎರಡನೆ ಮಹಡಿಗೆ ತೇಲಿ ತೇಲಿ ಬರುತ್ತಲಿತ್ತು. ಅಂದರೆ ನಮ್ಮ ಅಡುಗೆಯಾಕೆ ದ್ರೌಪದಿಯಮ್ಮನ ಸ್ಪೆಷಲ್ ಅಡುಗೆ ಅವರಿಗೆ ಮಾತ್ರ. ತೋಳಿಲ್ಲದ ಬಟ್ಟೆಯ ಲಲನೆಯರು ಬಂದರೆ ಕೆಂಗಣ್ಣಾಗುತ್ತಿದ್ದರು. ವಾಪಸಕಳಿಸಿ “ಮೈತುಂಬ ಬಟ್ಟೆ ಹಾಕೊಂಡು ಬಿಟ್ಟಿದ ಮುಡಿಯನ್ನು ಕಟ್ಟಿಕೊಂಡು ಬಾ!” ಎಂದು ಗದರುತ್ತಿದ್ದರು. ಸ್ಮಿತಾಳ ಚಿಕ್ಕಪ್ಪನ ಮನೆ ಜಯನಗರದ ಕಡೆಯಿತ್ತು. ಆಕೆ ವಾರಾಂತ್ಯದ ಎರಡು ದಿನಗಳು ಅಲ್ಲಿ ಹೋಗಿ ಗೆಳತಿಯರ ಜೊತೆ ಸೇರಿಸಿ ನನಗೂ ಬೇಕಾದ ಅಡುಗೆಯನ್ನು ದೊಡ್ಡ ದೊಡ್ಡ ಬಾಕ್ಸ್ಗಳಲ್ಲಿ ತುಂಬಿ ತರುತ್ತಿದ್ದಳು. ಸದ್ಯ ಒಳ್ಳೆಯ ಮನೆ ರುಚಿ ತೋರಿಸಿ ಆಕೆಗೆ ಇಂದಿಗೂ ಮನಸ್ಸಿನಲ್ಲಿ ನೆನಪಾದಾಗಲೆಲ್ಲ ಥ್ಯಾಂಕ್ಸ್s ಹೇಳಿಕೊಳ್ಳುತ್ತೇನೆ. ಊಟವಾದ ನಂತರ ಬಿಡುವು ಮಾಡಿಕೊಂಡು ನಾನು ಕುಮಾರ ವ್ಯಾಸ ಭಾರತ ಸನ್ನಿವೇಶಗಳನ್ನು, ಕುವೆಂಪುರವರ ಬಗೆಗಿನ ವಿಚಾರ ಹೇಳುತ್ತಿದ್ದೆ ಅವಳು ಅವಳ ಗೆಳತಿ ರಮ್ಯ ಬಹಳ ಆಸಕ್ತಿಯಿಂದ ಕೇಳಿ ಮಲಗುತ್ತಿದ್ದರು.      ಸ್ಮಿತ ಉದ್ಯೋಗ ಮಾಡುತ್ತಿದ್ದ ಯುವತಿ ನಾನು ಸಂಜೆಯ ತರಗತಿಗೆ ಹೋಗುವಾಗ ಹಾಲ್‌ನಲ್ಲಿ  ಕೀಇಡುವ ಬದಲು ಮರೆತು ತೆಗೆದುಕೊಂಡು ಹೋಗಿದ್ದೆ  ಫೋನ್ ಮಾಡಿ ಸುಟ್ಟವರಿಯುವಂತೆ ಮಾತನಾಡಿದಳು ದಢದಢನೆ ಅವಳೆಡೆಗೆ ಧಾವಿಸಿ ಬರುತ್ತಿದ್ದ ನನ್ನನ್ನು ಕಂಡಾಕೆ ಕೂಲ್ ಆದಳು ಮರುಮಾತನಾಡಲಿಲ್ಲ. ಇಂದಿಗೂ ಅವಳ ನೆನಪು ನನ್ನಲ್ಲಿ ಹಸಿರಾಗಿದೆ. ಬಿಸಿ ನೀರು ಎಲ್ಲಿ ಖಾಲಿಯಾಗಿಬಿಡುವುದೋ ಎಂದು ಸ್ನಾನಮಾಡಿಕೊಂಡು ಮಲಗುವವರು ಅಲ್ಲಿದ್ದರು. ಸ್ವಲ್ಪವೂ ಮುಜುಗರವಿಲ್ಲದೆ ಉಪಯೋಗಿಸಿದ ಪ್ಯಾಡನ್ನು ಬೇಕಾಬಿಟ್ಟಿ ಎಸೆದು ಬೇರೆಯವರಿಗೆ ಮಜುಗರ ತರಿಸುವವರು ಅಲ್ಲಿದ್ದರು. ಎದ್ದು ಶನಿಕಸ ಗುಡಿಸಿಕೊಳ್ಳದೆ ಕಸ ಗುಡಿಸುವವರು ಬರುವವರೆಗೂ ಕಾಯುವ ಸೋಮಾರಿಗಳು ಅಲ್ಲಿದ್ದರು. ಅಂತವರಿಗೆಲ್ಲ ಈ ಸ್ಮಿತ ಅಂದರೆ ಭಯ. ಒಂತರಾ  ಲೇಡಿ ರ್ಯಾಂಬೋ ಆಕೆ ಬರುತ್ತಿದ್ದಳೆಂದು ಗೊತ್ತಾದರೆ ಎಲ್ಲರು ಅಲರ್ಟ್ ಆಗಿ ಬಿಡುತ್ತಿದ್ದರು. ನನಗೋಸ್ಕರ ಅವರಿವರ ಬಳಿ ಕೇ ಕೇಳಿ  ನೋಟ್ಸ್s ತಂದುಕೊಡುತ್ತಿದ್ದಳು. ಇಷ್ಟರಲ್ಲಿ ಸ್ಮಿತಳ  ರೂಮ್ ಮೇಟ್ ವಾಪಾಸ್ಸು  ಪಿಜಿಗೆ ಬರುವುದು ಖಾತ್ರಿಯಾಯಿತು. ಬೇರೆ ರೂಂಗಳು ಖಾಲಿಯಿದ್ದರೂ ಅಲ್ಲಿಗೆ ಹೋಗಲು ನನಗೆ ಮನಸ್ಸಾಗಲಿಲ್ಲ. ಸ್ಮಿತ ಆಫೀಸಿನಿಂದ ಬರುವುದನ್ನೆ ಕಾಯ್ದು ನಾನು ಊರಿಗೆ ಹೊರಡುತ್ತೇನೆ! ನಿನಗೆ ಶುಭವಾಲಿ! ಎಂದೆ. ಮನಸ್ಸಿನಲ್ಲಿ ಅಲ್ಲಿ ಇರುವುದಕ್ಕೆ ಅಸೆ ಅದರೆ ಪರಿಸ್ಥಿತಿ ಬೇಡ ಅನ್ನಿಸುತ್ತಿತ್ತು. ಅಲ್ಲಿಗೆ ಅಕ್ಷಯ ತದಿಗೆ ಸ್ಮಿತಳ ಗೆಳತಿ ರಶ್ಮಿ ಅವರಿಬ್ಬರು ವಿಜಯನಗರ  ಮಾರ್ಕೆಟ್ಗೆ ಹೋಗಿ ಅಗತಾನೆ ಸಂಪಿಗೆ, ಕನಕಾಂಬರ, ಮರುಗ ಹಾಕಿ ಕಟ್ಟಿದ ಮೈಸೂರು  ಮಲ್ಲಿಗೆಹೂವನ್ನು , ಬಳೆ ಅರಿಸಿನ ಕುಂಕುಮ ಸ್ವೀಟ್ ಎಲ್ಲ ತಂದರು. ನನ್ನನ್ನು ಕೂರಿಸಿ ನನ್ನ ಮಡಿಲು ತುಂಬಿದರು ಎಲ್ಲರ ಕಣ್ಣಂಚಲ್ಲಿ ನೀರು!  ನನ್ನ ವೇಲನ್ನೆ ಹರಹಿ ಮಡಿಲು ತುಂಬಿಸಿಕೊಂಡೆ.ಈಗಿನ ಹಾಗೆ ಸ್ಮಾರ್ಟ್   ಫೋನ್ ಹಾವಳಿ ಅಗಿರಲಿಲ್ಲ ಇದ್ದರೆ  ಫೋಟೊಗಳಲ್ಲಿ ಒಂದಷ್ಟು ನೆನಪು ಹಸಿಯಾಗಿ ಇರುತ್ತಿದ್ದವೇನೋ.? ಗೊತ್ತಿಲ್ಲ!! “ಥ್ಯಾಂಕ್ಸ್ ಫಾರ್ ಟೀಚಿಂಗ್ ಪಲ್ಸಸ್ ಆಫ್ ಲೈಫ್ ಬಿಟ್ಸ್ ಆಫ್ ಲೈಫ್”s  ಅಂತ ಅಂದುಕೊAಡೇ ನನ್ನೆಲ್ಲಾ ಲಗೇಜ್ ಪ್ಯಾಕ್ ಮಾಡಿಕೊಂಡೆ. ಆದರೆ ಹೊಸಬರನ್ನು ಕಳ್ಳಗಣ್ಣುಗಳಿಂದಲೆ ನೋಡುವ ಅನುಮಾನದ ಕಣ್ಣುಗಳಿಗೆ ಈಗಲೂ ಧಿಕ್ಕಾರವಿದೆ.      ಮರು ದಿನ ಸ್ಮಿತ ಕಛೆರಿಗೆ ರಜೆ ಹಾಕಿ ಅಚೇ ಕರೆದುಕೊಂಡು ಎಂದು ಲಗೇಜ್ ಇಟ್ಟುಕೊಟ್ಟು ಶುಭಾಶಯಗಳನ್ನು ಗದ್ಗದಿತಳಾಗಿಯೇ ಹೇಳಿದಳು ಬಾಯ್! ಬಾಯ್! ಅನ್ನುವ ಆಕೆಯ ಕೈಸನ್ನೆ ಇನ್ನೊಮ್ಮೆ “ಈ ಪಿ.ಜಿ. ಗೆ ಕಾಲಿಡಬೇಡಿ ನಿಮ್ಮಂತಹವರಿಗೆಲ್ಲ ಈ ಪಿ.ಜಿ. ಜೀವನ!” ಎಂದು ವಿನಂತಿಸಿಕೊಳ್ಳುವAತಿತ್ತು. ವಿನಂತಿಗೊಳ್ಳುತ್ತಲೇ ಆಕೆ ಮರೆಯಾದಳು.. ಬಿಳಿಬಣ್ಣದ ಚೂಡಿದಾರ್ಗೆ ಧರಿಸಿದ್ದ ಅವಳ ತಿಳಿನೀಲಿ ಬಣ್ಣದ ವೇಲ್ ತಿಳಿಗಾಳಿಗೆ  ಹಾರಾಡುತ್ತಿರುವಂತೆಯೇ  ನಾನಿದ್ದ ಅಟೋ ಮುಂದೆ  ಸಾಗಿತ್ತು. ಅವಳ ನಂಬರ್  ಬಹಳ ದಿನಗಳವರೆಗೆ ಇತ್ತು! ಆದರೆ ಈಗಿಲ್ಲ !ಕಡೆ ಪಕ್ಷ ಆಕೆಯ ನಂಬರನ್ನಾದರೂ ಉಳಿಸಿಕೊಂಡಿಲ್ಲವಲ್ಲ ಎಂಬ ಕೊರಗು ಇವತ್ತಿಗೂ ಇದೆ. ಆದರೆ ಆಕೆ ಸಾಯಿಮಂದಿರದಿAದ ತಂದು ಕೊಟ್ಟ ಸಾಯಿ ಫೋಟೋ ನನ್ನ

ಮೊದಲ ಬಾರಿ ಪೇಯಿಂಗ್ ಗೆಸ್ಟ್ ಆಗಿ ಹೋದಾಗ Read Post »

ಇತರೆ, ಜೀವನ

ಕಡಿವಾಣವೂ ಪ್ರೀತಿಯೇ!!!!!

ಲೇಖನ ಕಡಿವಾಣವೂ ಪ್ರೀತಿಯೇ!!!!! ಮಾಲಾ ಅಕ್ಕಿಶೆಟ್ಟಿ   ಕೊರೊನಾ ಲಾಕಡೌನ್ ಕ್ಕಿಂತ ಮುಂಚೆ ನಡೆದ ಮಾತಿದು.ಆತ್ಮೀಯರೊಬ್ಬರು ಚರ್ಚಿಸಿದ ವಿಚಾರ.ಅವರು ವಿವರಿಸಿದ ಹಾಗೆ ಈಗ ಒಂದು ವರ್ಷದಿಂದ ಶಾಲೆಗೆ ಹೋಗುವ ನಾಲ್ಕು ವರ್ಷದ ಮಗಳು ದಿನಾಲು ಒಂದಿಲ್ಲೊಂದು ವಸ್ತುಗಳನ್ನು ಶಾಲೆಯಲ್ಲಿ ಕಳೆದುಕೊಂಡು ಬಂದು ತಾಯಿಗೆ ಮತ್ತೆ ಹೊಸ ವಸ್ತುಗಳನ್ನು ಕೊಡಿಸುವಂತೆ ಪೀಡಿಸುತ್ತಿದ್ದಳು. ಮಗಳು ದಿನವೂ ಪೆನ್ಸಿಲ್, ರಬ್ಬರ್, ಶಾರ್ಪನರ್, ಕ್ರೆಯಾನ್ಸ್ ಗಳನ್ನು ಕಳೆದುಕೊಂಡು ಬರುವುದು ತಾಯಿಗೆ ತಲೆನೋವಾಗಿ ಪರಿಣಮಿಸಿತ್ತು. ಬೇಸತ್ತ ತಾಯಿ ಒಂದು ದಿನ ಮಗಳಿಗೆ ಸ್ಟ್ರಿಕ್ಟಾಗಿ ಎಚ್ಚರಿಕೆ ಕೊಟ್ಟಳು. ದಿನಾಲೂ ಶಾಲೆಯಿಂದ ಬಂದ ತಕ್ಷಣ ತನ್ನಲ್ಲಿರುವ ಪೆನ್ಸಿಲ್, ರಬ್ಬರ್, ಶಾರ್ಪನರ್ ಮತ್ತು ಕ್ರೆಯಾನ್ಸ್ ಗಳನ್ನು ತಪ್ಪದೇ ತನಗೆ ತೋರಿಸಬೇಕು, ಕಳೆದುಕೊಂಡು ಬಂದರೆ ಹೊಸ ವಸ್ತುಗಳನ್ನು ಕೊಡುವುದಿಲ್ಲವೆಂದು.ಈ ನಿಯಮವನ್ನು ತಲೆಯಲ್ಲಿ ಇಟ್ಟುಕೊಂಡ ಮಗಳು ದಿನಾಲೂ ತಪ್ಪದೆ ವಸ್ತುಗಳನ್ನು ತೋರಿಸತೊಡಗಿದಳು. ಕಳೆದುಕೊಂಡು ಅಥವಾ ಶಾಲೆಯಲ್ಲಿ ಎಲ್ಲೋ ಇಟ್ಟು ಮರೆತು ಬರುವ ಪದ್ಧತಿ ಕೊನೆಗೊಂಡಿತು.           ಈಗಿನ ಪಾಲಕರು ಮಕ್ಕಳಿಗೆ ಬೇಕೆಂದು ಎಲ್ಲವನ್ನೂ ಮಕ್ಕಳು ಕೇಳುವ ಮೊದಲೇ ಬಹುವಾಗಿ ತಂದು ಬಿಡುವ ಸಂಪ್ರದಾಯ ರೂಢಿಸಿಕೊಂಡು ಬಿಟ್ಟಿದ್ದಾರೆ. ವರ್ಷದುದ್ದಕ್ಕೂ ಒಂದು ಪೆನ್ಸಿಲ್, ಒಂದು ರಬ್ಬರ್, ಒಂದು ಶಾಪ್ ನರ್, ಒಂದು ಕ್ರೆಯಾನ್ ಬಾಕ್ಸ್ ಇದ್ದರೆ ಸಾಕು. ಆದರೆ ಪಾಲಕರು ಡಜನ್ಗಟ್ಟಲೆ ವಸ್ತುಗಳನ್ನು ತಂದಿಟ್ಟಿರುತ್ತಾರೆ. ಅವು ಎಲ್ಲಿಟ್ಟಿರುತ್ತಾರೆಂದು ಮಕ್ಕಳಿಗೂ ಗೊತ್ತು. ದಿನವೂ ಯಾವುದಾದರೂ ವಸ್ತುವನ್ನು ಕಳೆದುಕೊಂಡು ಬಂದು ಪಾಲಕರಿಗೆ ಹೇಳದೆಯೇ ಹೊಸದನ್ನು ಪ್ಯಾಕೆಟ್ ನಿಂದ ಒಡೆದು ಉಪಯೋಗಿಸಲು ಪ್ರಾರಂಭಿಸುತ್ತಾರೆ. ತಿಂಗಳೊಪ್ಪತ್ತಿನಲ್ಲಿ ಡಜನ್ ಡಜನ್ ವಸ್ತುಗಳು ಮಾಯವಾಗಿರುತ್ತವೆ. ಮತ್ತೆ ಬೇಕು ಎಂದು ಹಟ ಹಿಡಿದಾಗ ಮಾತ್ರ, ಸಾಮಾನು ಖಾಲಿಯಾಗಿದೆ ಎಂಬ ಅರಿವು ಪಾಲಕರದ್ದಾಗುತ್ತದೆ. ಅಲ್ಲಿಯವರೆಗೂ ಎಷ್ಟಿತ್ತು?ಹೇಗೆ ಖಾಲಿಯಾಯಿತು? ಎಂಬುದು ಗೊತ್ತೇ ಆಗಿರುವುದಿಲ್ಲ.        ನಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡರೆ ಹಟ ಎನ್ನುವ ಶಬ್ದ ಎಂದೂ ಶಬ್ದಕೋಶದಲ್ಲಿ ಇರಲೇ ಇಲ್ಲ. ಪಾಲಕರು ಕೊಡಿಸಿದ ವಸ್ತುಗಳನ್ನು ಅವು ಇನ್ನೂ ಉಪಯೋಗಕ್ಕೆ ಬರಲ್ಲ ಎನ್ನುವವರಿಗೆ ಬಳಸಲಾಗುತ್ತಿತ್ತು. ಜೂನ್ ತಿಂಗಳಲ್ಲಿ ಸಾಮಾನುಗಳನ್ನು ಕೊಡಿಸಿದರೆ ಮುಗಿಯಿತು ಮುಂದೆ ಮುಂದಿನ ಜೂನ್ನಲ್ಲಿ ಶಾಲೆಯ ವಸ್ತುಗಳನ್ನು ಖರೀದಿಸಲಾಗುತ್ತಿತ್ತು. ಕಳೆದುಕೊಂಡು ಬಂದ ಉದಾಹರಣೆಗಳು ತುಂಬಾ ಕಡಿಮೆ. ಜೊತೆಗೆ ವೆರೈಟಿ,ವೆರೈಟಿ ಅಥವಾ ಪ್ರತಿದಿನಕ್ಕೆ ಹೊಸದನ್ನು ಉಪಯೋಗಿಸಬೇಕೆಂಬ ಹಟವೂ ಇರಲಿಲ್ಲ. ಮೇಲಾಗಿ ಆಗಿನ ಪಾಲಕರು ಎಷ್ಟು ಬೇಕೋ ಅಷ್ಟೇ ತಂದು ಮಕ್ಕಳಿಗೆ ಕೊಡುತ್ತಿದ್ದರು. ಡಜನ್ಗಟ್ಟಲೆ ತಂದ ರೂಢಿಯೇ ಇರಲಿಲ್ಲ. ವರ್ಷಕ್ಕೆ ಇಂತಿಷ್ಟೇ ಎಂಬ ಕಟ್ಟುನಿಟ್ಟು ಇದ್ದುದರಿಂದ ವಸ್ತುಗಳ ಉಪಯೋಗ ಮತ್ತು ರಕ್ಷಣೆ ಸರಿಯಾಗಿಯೇ ಆಗುತ್ತಿತ್ತು.           ಕಾಲ ಬದಲಾದಂತೆ ಪಾಲಕರ ಮನಸ್ಥಿತಿಯೂ ಬದಲಾಗಿದೆ. ಮಕ್ಕಳು ಬೇಡಿದ್ದೆಲ್ಲವನ್ನು ಕೊಡಿಸುವುದು ತಮ್ಮ ಧರ್ಮ ಎಂದು ತಿಳಿದು, ಕೇಳಿದ್ದು ಕೇಳದೆ ಇದ್ದದ್ದನ್ನೆಲ್ಲ ಕೊಡಿಸುವುದನ್ನು ಪಾಲಕರು ಅನುಸರಿಸುತ್ತಿದ್ದಾರೆ. ಅವಶ್ಯಕತೆಗೆ ತಕ್ಕಂತೆ ಕೊಡಿಸುವುದು ಉತ್ತಮ. ಜೊತೆಗೆ ಅದರ ಉಪಯೋಗ ಸರಿಯಾಗಿ ಆಗುತ್ತದೆಯೋ ಇಲ್ಲವೋ ಅನ್ನುವುದನ್ನು ಪರೀಕ್ಷಿಸುತ್ತಿರಬೇಕು. ದುಂದುವೆಚ್ಚಕ್ಕೆ ಕಡಿವಾಣ ಹಾಕಬೇಕು. ದುಡ್ಡಿನ ಮಹತ್ವ ತಿಳಿಯುವಂತೆ ಮಾಡಬೇಕು.            ಇಗೀಗ ಡ್ರಗ್ಸ ಜಾಲದಲ್ಲಿ ಸಿಕ್ಕಿಕೊಂಡವರನ್ನ ನೋಡಿದರೆ ಇವರಿಗೆ ದುಡ್ಡು ಸಿಕ್ಕುವುದು ಎಷ್ಟು ಸಲೀಸು!!!ಮೈಯೊಳಗಿನ ರಕ್ತವನ್ನು ಬೆವರಿನಂತೆ ಸುರಿಸಿದರೂ ಬಡವನಿಗೆ ಎರಡು ಹೊತ್ತಿನ ಕೂಳು ದುರ್ಲಭ.ಇಂಥ ಬಡತನವನ್ನು ಉಂಡುಟ್ಟವರಿಗೆ,ಉತ್ತಮ ನೌಕರಿ, ತಮ್ಮದೊಂದು ಮನೆ,ಮಕ್ಕಳಿಗೆ ವಿದ್ಯಾಭ್ಯಾಸ ಕೊನೆಗೆ ಸಾಧ್ಯವಾದರೆ ಕಾರ್ ಒಂದು ಖರೀದಿ.ಇವಷ್ಟೇ ಕನಸುಗಳು.ಶ್ರೀಮಂತಿಕೆಯಲ್ಲೇ ಹುಟ್ಟಿದವರಿಗೆ, ಇಲ್ಲಾ ಇಗೀಗ ಶ್ರೀಮಂತ ಆದವರಿಗೆ ಅಥವಾ ತಾವಾಗಿಯೇ ದುಡ್ಡು ಗಳಿಸಿ ಪ್ರಾಥಮಿಕ ಹಂತದ ಎಲ್ಲಾ ಆಸೆಗಳು ಸಂಪೂರ್ಣಗೊಂಡವರಿಗೆ ದುಡ್ಡು ಕಷ್ಟವಲ್ಲ.ಇಂಥವರೇ ವ್ಯಸನಿಗಳಾಗುತ್ತಾರೆ.        ಮಕ್ಕಳು ಕೇಳಿದ್ದೆಲ್ಲವನ್ನೂ ಕೊಡಿಸುವುದು ಪ್ರೀತಿ ಎಂದುಕೊಂಡಿದ್ದಾರೆ ಕೊಡಿಸದಿದ್ದರೆ ಪ್ರೀತಿ ಇಲ್ಲ ಅಥವಾ ಕಡಿಮೆ ಎಂದು ಮಕ್ಕಳು ತಿಳಿದಾರು ಎಂಬ ಭಯದಲ್ಲೇ ಕೊಡಿಸುತ್ತಾರೆ. ಬೇಡಿದ್ದೆಲ್ಲವನ್ನೂ ಕೊಡಿಸುವುದು ಪ್ರೀತಿಯೇ? ಹಟ ಯಾವಾಗಲೂ ಗೆಲ್ಲಬೇಕೆ? ಇಲ್ಲ ಬೇಡಿದ್ದೆಲ್ಲವನ್ನೂ ಕೊಡಿಸದಿರುವುದು ಪ್ರೀತಿ ಎಂಬುದನ್ನು ಪಾಲಕರು ತೋರಿಸಬೇಕು.ಕಡಿವಾಣವೂ ಪ್ರೀತಿಯ ಸಂಕೇತ. ಯಾವ ವಸ್ತುವೂ ಜಗತ್ತಿನಲ್ಲಿ ಪುಗ್ಗಟ್ಟೇ ಸಿಗಲ್ಲವೆಂದು ತಿಳಿಹೇಳಬೇಕಾಗಿದೆ.ಹಣದ, ದುಡಿತದ ಮಹತ್ವವನ್ನು ಹೇಳಿಕೊಡಬೇಕು. ಬೇಕಾಬಿಟ್ಟಿ ವಸ್ತುಗಳನ್ನು ತೆಗೆದುಕೊಂಡು, ಒಂದು ದಿನವೂ ಉಪಯೋಗಿಸದೇ ಮತ್ತೆ ಹೊಸದು ಬೇಕೆನ್ನುವುದಕ್ಕೆ ಲಗಾಮ ‌ಮತ್ತು ‌ಹಟ ‌ಒಳ್ಳೆಯದಲ್ಲವೆಂದು ತಿಳಿಹೇಳಬೇಕು.  ***********************************************************

ಕಡಿವಾಣವೂ ಪ್ರೀತಿಯೇ!!!!! Read Post »

ಕಥಾಗುಚ್ಛ

ಹೆಣ್ಣು

ಕಥೆ ಹೆಣ್ಣು ಸಹನಾ ಪ್ರಸಾದ್ ರಾತ್ರಿ ಎಲ್ಲ ಮಧುಸೂದನನಿಗೆ ನಿದ್ರೆ ಇಲ್ಲ. ಆ ಕಡೆ, ಈ ಕಡೆ ಹೊರಳಾಡಿ, ಎದ್ದು ಕುಳಿತು, ಮತ್ತೆ ಮಲಗಿ, ಹೀಗೆ ಅರ್ಧ ರಾತ್ರಿ ಕಳೆಯಿತು. ಸಧ್ಯ, ಹೆ0ಡತಿಗೆ ಬೇರೆ ಕೋಣೆಯಲ್ಲಿ ಮಲಗಿ ಅಭ್ಯಾಸ. ಇಲ್ಲದಿದ್ದರೆ ಇಷ್ಟು ಹೊತ್ತಿಗೆ ರ0ಪ ಮಾಡಿ ಬಿಟ್ಟಿರುತ್ತಿದ್ದಳು. “ ಅಬ್ಬಬ್ಬಾ, ರಾತ್ರಿಯೆಲ್ಲ ನಿಮ್ಮ ಗೊರಕೆ ಇಲ್ಲಾ ಹೊರಳಾಟ, ನನ್ಕೈಲಿ ಆಗುವುದಿಲ್ಲಪ್ಪ. ಆರಾಮವಾಗಿ ಹೊದ್ದು ಮಲಗಲು ನಿಮಗೇನು ಕಷ್ಟ? ಹೇಗು ನನಗೆ ಚಿಕ್ಕ ವಯಸ್ಸಿನಿ0ದ ಆಸೆ, ನನ್ನದೇ ರೂಮು ಇರಬೇಕೆ0ದು, ರಮ್ಯಳ ರೂಮು ಖಾಲಿಯಾಗಿದೆಯಲ್ಲ, ಅಲ್ಲಿ ನಾನಿರುತ್ತೇನೆ” ಎ0ದು ಮಗಳ ರೂಮಿಗೆ ಶಿಫ್ಟ್ ಆಗಿದ್ದಳು. ಮದುವೆಯಾಗಿ ಗ0ಡನ ಮನೆಗೆ ಹೋದ ಮಗಳು ಬರುವುದು ವಾರಕೊಮ್ಮೆ. ಬ0ದರೂ ಜಾಸ್ತಿ ಹೊತ್ತು ಇರುತ್ತಿರಲಿಲ್ಲ. ಇಡೀ ಕೋಣೆ ತನ್ನದಾದರೂ ನಿದ್ರೆ ದೂರವಾಗಿದೆ. “ ಪರವಾಗಿಲ್ಲ ರೀ, ಇದ್ದೊಬ್ಬ ಮಗಳ ಮದುವೆ ಮಾಡಿ ನಿಷ್ಚಿ0ತೆಯಾದಿರಿ. ಇನ್ನು ನೀವು, ನಿಮ್ಮ ಪತ್ನಿ, ನಿಮ್ಮ ಕೆಲಸ, ಹಾಯಾಗಿರಬಹುದು” ಮಗಳ ಮದುವೆಯಲ್ಲಿ ಬಹಳ ಜನ ಹೇಳಿದ ಮಾತಿದು. ಅದು ನಿಜ ಕೂಡ. ತಡವಾಗಿ ಮದುವೆಯಾದರೂ, ತನ್ನದು, ಸ0ಧ್ಯಳದು ಅನ್ಯೋನ್ಯ ದಾ0ಪತ್ಯ.ತನಗಿ0ತಾ ಹೆಚ್ಚು ಸಿರಿವ0ತಿಕೆ ಅವಳ ತವರು ಮನೆಯದು. ನೋಡಲು ಸು0ದರ, ಅಷ್ಟೇ ಒಳ್ಳೆಯ ಮನಸ್ಸು. ತನ್ನ0ತಹ ಸುಮಾರಾದ  ಗ0ಡನ್ನು ಮದುವೆಯಾದುದ್ದು ಅಚ್ಚರಿಯೆ. ಇಲ್ಲ, ಅದು ಅನಸೂಯ ಅತ್ತೆಯ ದಯೆ. ಥೂ, ಯಾಕೊ ಅತ್ತೆಯನ್ನು ಮನಸ್ಸಿನಿ0ದ ತೆಗೆದು ಹಾಕಲೇ ಆಗುತ್ತಿಲ್ಲ. ತನ್ನ ಬದುಕಲ್ಲಿ ಅವಳು ಒ0ದಾಗಿಬಿಟ್ಟಿದ್ದಾಳೆ. ಮಗ್ಗಲು ಬದಲಾಯಿಸಿದ. ಸ0ಧ್ಯಳಿಗೆ ಚೊಚ್ಚಲು ಬಸಿರು, ರಮ್ಯಳದ್ದು. ಮೊದಲೇ ಇಬ್ಬರಿಗೂ  ಲೇಟ್ ಮದುವೆ, ಬಸಿರಾದಾಗ ಮದುವೆಯಾಗಿ ಎರಡು ವರುಷಗಳ ಮೇಲಾಗಿ ಪರಿಸ್ಥಿತಿ ನಾಜೂಕಾಗಿತ್ತು. ಮಗಳ0ತೆ ಜೋಪಾನ ಮಾಡಿದವಳು ಅತ್ತೆಯೆ. ಅವಳು ಇಲ್ಲದಿದ್ದರೆ ದೂರದ ತವರಿಗೆ ಕಳುಹಿಸಿ, ಅಲ್ಲಿ ಅವಳ ವಯಸಾದ ತಾಯಿಯ ಮಡಿಲಲ್ಲಿ ಬಿಡಬೇಕಿತ್ತು. ಓಡಾಟ ಬೇಡವೇ ಬೇಡ, ಸ0ಪೂರ್ಣ ವಿಶ್ರಾ0ತಿ  ಎ0ದು ಬೇರೆ ಹೇಳಿಬಿಟ್ಟಿದ್ದರಲ್ಲ. ಆ ಸಮಯಕ್ಕೆ ಅನಸೂಯ ಅತ್ತೆಯ ನೆರವಿಲ್ಲದಿದ್ದರೆ ಇ0ದು ರಮ್ಯಾ ಇರುತ್ತಲೇ ಇರಲ್ಲಿಲ್ಲ…. ಇನ್ನು ಮಲಗಲು ಸಾದ್ಯವೇ ಇಲ್ಲ ಎ0ದು ಎದ್ದು ಕುಳಿತ. ಸ0ಧ್ಯಳನ್ನು ಎಬ್ಬಿಸಿ ಎಲ್ಲವನ್ನು ಹೇಳಿಬಿಡಲೇ, ಅವಳ ಮಡಿಲಲ್ಲಿ ಮುಖವಿಟ್ಟು ಅತ್ತು ಹಗುರವಾಗಲೇ, ದಯವಿಟ್ಟು ಅತ್ತೆಗೆ ಎಲ್ಲಾ ವಿವರಿಸಿ ನನ್ನನ್ನು ಕ್ಷಮಿಸಲು ಹೇಳು ಎ0ದು ಕಾಲಿಗೆ ಬೀಳಲೇ, ಉದ್ವಿಗ್ನನಾಗಿ ಎದ್ದು ನಿ0ತ.  ಕಾಲುಗಳು ಆಗುವುದೇ ಇಲ್ಲವೆ0ದು ಮುಷ್ಕರ ಹೂಡಿದವು. ಹೇಳಲು ಉಳಿದಿರುವುದಾದರೂ ಏನು? ಎಲ್ಲ ಕಾಗದ ಪತ್ರಗಳು, ಡಾಕ್ಯುಮೆ0ಟುಗಳು ತಯ್ಯಾರಾಗಿವೆ. ವಕೀಲರು, ಲೀಗಲ್ ಅಡ್ವೈಸರ್ಗಳು ಎಲ್ಲಕ್ಕು ಸಹಿ ಹಾಕಿ ರೆಡಿ ಮಾಡಿದ್ದಾರೆ. ಇದೇನು ನೆನ್ನೆ ಮೊನ್ನೆಯ ಮಾತಲ್ಲ. ಸುಮಾರು ಮೂರು ತಿ0ಗಳು ಹಗಲು ರಾತ್ರಿ ಯೋಚಿಸಿ ಮಾಡಿದ ಯೋಜನೆ. ನಾಳೆ ಇದಕ್ಕೆಲ್ಲ ತೆರೆ ಬಿದ್ದು, ಇನ್ನು ತನ್ನ ಮಾತು, ಬೇರೆ ಡೈರೆಕ್ಟರ್ಗಳ ಇಷ್ಟದ0ತೆ ಕ0ಪನಿ ನಡೆಯುವುದು. ಅನಸೂಯ ಅತ್ತೆಗೆ ನಾಳೆ ವಿದಾಯ. ತನ್ನ ಮಗುವಿಗಿ0ತ ಪ್ರೀತಿಸಿ, ತನ್ನೆಲ್ಲ್ಲಾ ಸಾರವನ್ನುಣಿಸಿ ಈ ಕ0ಪನಿಯ ಏಳಿಗೆಗೆ ಕಾರಣಳಾದ ಅವಳನ್ನು ತಾವು ಹೊರಕಳಿಸುತ್ತಿರುವುದು. “ ಅವರದು ಹಳೇ ಕಾಲದ ತರ್ಕಗಳು, ಯೋಚನೆಗಳು. ಆ ಥರಹದ ಮೋರಾಲಿಟಿ ಈಗಿನ ಕಾಲಕ್ಕೆ ಸರಿಹೋಗಲ್ಲ. ನಮ್ಮ ಕ0ಪನಿಗೆ ಬ್ಯುಸಿನೆಸ್ಸ್ ಮುಖ್ಯ, ಧರ್ಮ, ಅಧರ್ಮ, ಈ ತರಹದ ಗೊಡ್ಡು ಯೋಚನೆಗಳಲ್ಲ. ನ್ಯಾಯ,ಅನ್ಯಾಯ ಅ0ತ ತೆಲೆಕೆಡಿಸಿಕೊಳ್ಳುವುದು, ಲ0ಚ ತಿಳಿದು ಕೊಡುವುದಿಲ್ಲ,ಯಾರನ್ನೂ ಒಲಿಸಿಕೊಳ್ಳುವುದಿಲ್ಲ ಎ0ದೆಲ್ಲಾ ಹೇಳುತ್ತಾ ಕುಳಿತರೆ ಲಾಸ್ ಆಗದೆ ಮತ್ತಿನ್ನೇನು? ಅವತ್ತು ಆ ಮನುಷ್ಯನನ್ನು  ಸರಿಯಾಗಿ ನೋಡಿಕೊ0ಡಿದ್ದರೆ , ಆ ಕಾ0ಟ್ರಾಕ್ಕ್ಟ್  ನಮ್ಮದಾಗುತ್ತಿತ್ತು., ಧರ್ಮಭೀರುಗಳಾಗಿ ವ್ಯಾಪಾರ, ವ್ಯವಹಾರ ಸಾಧ್ಯವಿಲ್ಲ. ಅನಸೂಯ ಮೇಡಮ್ ರಿಟೈರಾಗಲಿ, ಕ0ಪನಿಯ ಏಳ್ಗೆಗೆ   ಅವರಿರುವವರೆಗೆ ಸಾಧ್ಯವೆ ಇಲ್ಲ” ಬಹಳ ದಿನಗಲಿ0ದ ಅತ್ತೆಯ ಬಗ್ಗೆ ಉಚ್ಚ ವಲಯದಲ್ಲಿ ಚರ್ಚೆ ನಡೆಯುತ್ತಲೇ ಇದೆ. ಕ0ಪನಿಯ ಪ್ರಗತಿಗೆ ಅವಳ ಕೊಡುಗೆ ಅಪಾರ ಎನ್ನುವುದೇನೋ ಸರಿ, ಆದ್ರೆ ಈಗಿನ ಕುಸಿತಕ್ಕೆ ಅವಳ ನೀತಿಯುತವಾದ ಯೋಚನೆಗಳು, ಅನಿಸಿಕೆಗಳು ಸುಮಾರು ಮಟ್ಟಿಗೆ  ಕಾರಣ ಎನ್ನುವುದೂ ಸುಳ್ಳಲ್ಲ. ನಾಳೆ ಅತ್ತೆಗೆ ಫೇರ್ ವೆಲ್ ಪಾರ್ಟಿ. ಅವಳಿಗೆ ದೊಡ್ಡ ಬೊಕೆಯಿತ್ತು, ಬೆಳ್ಳಿ ಗಣಪನ ವಿಗ್ರಹ ಕೊಟ್ಟು “ ಆಯಿತು, ನೀನಿನ್ನು ಹೊರಡಮ್ಮ” ಎನ್ನುವ ಕಾರ್ಯಕ್ರಮ. ಅವಳನ್ನು ಈ ರೀತಿ ವೀ ಅರ್ ಎಸ್ ತೆಗೆದುಕೊಳ್ಳುವುದಕ್ಕೆ ಕಮಿಟಿಗೆ ಸಪೋರ್ಟ್ ನೀಡಿದವನಲ್ಲಿ ತಾನೂ ಒಬ್ಬ. ಅತ್ತೆಗೂ ಇದು ಗೊತ್ತು. ಇದುವರೆಗೂ ಅವಳು ತನಗೇನೂ ಹೇಳಿಲ್ಲ. ಸ0ಧ್ಯಳಿಗೂ ಗೊತ್ತಿಲ್ಲ. ಮೊದಲೇ ಅವಳ ದೃಷ್ಟಿಯಲ್ಲಿ ತಾನು ಹಣಕ್ಕಾಗಿ ಮಾನವೀಯತೆಯನ್ನು ಮರೆಯುವ0ತಹವನು. ಈಗ ಅತ್ತೆಯನ್ನು ಕ0ಪನಿಯಿ0ದ ಹೊರ ಕಳಿಸುವುದರಲ್ಲಿ ತನ್ನ ಪಾತ್ರವಿದೆ ಎ0ದರೆ ಭೂಮ್ಯಾಕಾಶವನ್ನು ಒ0ದು ಮಾಡಿಬಿಡುವಳು. ಬೆಳಗು ಹರಿದೇ ಬಿಟ್ಟಿತು. ತಿ0ಡಿಯನ್ನೂ ತಿನ್ನದೆ ಮನೆಯಿ0ದ ಹೊರಬಿದ್ದ. ಆಫೀಸು ತಲುಪಿ ಬೋರ್ಡ್ ರೂಮಿನಲ್ಲಿ ಸೇರಿ ಮೂಲೆ ಹಿಡಿದು ಕುಳಿತಾಗಲೂ, ಅಲ್ಲಿ ಕೊಟ್ಟ ತ0ಪು ಪಾನೀಯ ಕುಡಿದಾಗಲೂ, ಅತ್ತೆ, ಸು0ದರ ರೇಷ್ಮೆ ಸೀರೆ ಉಟ್ಟು ನಸುನಗುತ್ತಾ ಒಳ ಬ0ದದ್ದು, ಅವಳ ಬಗ್ಗೆ ಹೊಗಳಿಕೆಯ ಮಾತು ಬೇರೆಯವರು ಹೇಳಿದ್ದು ಕೇಳಿದಾಗಲೂ ಮನಸ್ಸಿನ ಚಡಪಡಿಕೆ, ಎದೆಯ ಡವಡವ ನಿಲ್ಲಲಿಲ್ಲ. ಸಭೆಯನ್ನು ಉದ್ದೇಶಿಸಿ ಎರಡು ಮಾತುಗಳನ್ನಾಡಲು ಕೇಳಿಕೊಳ್ಳಲು, ಅವಳು ಎದ್ದು ನಿ0ತಳು. ತನ್ನ ಬಗ್ಗೆ ಈಗ ಹೇಳುವಳು, ತಾನೆ0ತಹ ದ್ರೋಹಿ ಎನ್ನುವಳು, ತನ್ನ ಯೌವನ, ಜೀವನವೆಲ್ಲಾ ಧಾರೆ ಎರೆದ ಈ ಕ0ಪನಿ ತನ್ನನ್ನೆಷ್ಟು ಕ್ರೂರವಾಗಿ ಹೊರಕಳುಹಿಸುತ್ತಾ ಇದೆ ಎನ್ನುವಳು, ಬೇರೆಯವರಿರಲಿ, ಸ್ವ0ತ ಅಣ್ಣನ ಮಗನಾದ ತಾನು ಹೀಗೆ ಮಾಡಬಾರದಾಗಿತ್ತು ಎನ್ನುವಳು…. ಕಾಯುತ್ತಾ ಕುಳಿತವನಿಗೆ, ಕೈಯಲ್ಲಿದ್ದ ಗ್ಲಾಸು ಬಿದ್ದು ಒಡೆದಿದ್ದು, ಎಲ್ಲಾ ತನ್ನತ್ತ ನೋಡಿದ್ದು, ಅತ್ತೆ ಮುಗುಳ್ನಗುತ್ತ ಎಲ್ಲರಿಗೂ ವಿದಾಯ ಹೇಳಿದ್ದು, ಕ0ಪನಿಗೆ ಒಳ್ಳೆಯದಾಗಲಿ ಎ0ದು ಹರಸಿದ್ದು, ಇನ್ನು ಮು0ದೆ ಅವಳ ಜಾಗವನ್ನಾಕ್ರಮಿಸುವ ತನಗೆ ಶುಭ ಕೋರಿದ್ದು, ಯಾವುದೇ ದ್ವೇಷ, ರೋಷದ ಮಾತಾಡದಿದ್ದು, ಅತ್ತೆಯ ಎದುರು ತಾನು ತೀರ ಸಣ್ಣವನಾಗಿಬಿಟ್ಟೆ ಎ0ಬ ನೋವಿನ ವಿನಹ ಏನೂ ಅರಿವಾಗಲಿಲ್ಲ. *************************************************

ಹೆಣ್ಣು Read Post »

ಕಾವ್ಯಯಾನ

ಹೂ ಬೆಳಗು

ಕವಿತೆ ಹೂ ಬೆಳಗು ಫಾಲ್ಗುಣ ಗೌಡ ಅಚವೆ ಸರಿಯುವ ಕತ್ತಲನ್ನು ಮರದಎಲೆಗಳ ನಡುವೆ ಕುಳಿತ ಹಕ್ಕಿಗಳುತದೇಕ ಚಿತ್ತದಿಂದ ನೋಡುತ್ತಿವೆ ಆಗಷ್ಟೇ ಕಣ್ಣು ಬಿಟ್ಟ ನಸುಕುದೊಸೆ ಹೊಯ್ಯಲುಬೆಂಕಿ ಒಟ್ಟುತ್ತಿದೆ ಹೊಂಗನಸ ನೆನೆದುಒಂದೇ ಸವನೆ ಮುಸುಕುವ ಮಂಜುಮರದ ಎಲೆಗಳ ತೋಯಿಸಿಕಚಗುಳಿಯಿಡುತ್ತಿದೆ ಆಗತಾನೇ ಹೊಳೆ ಸಾಲಿನಲ್ಲಿಮುಖ ತೊಳೆದುಕೊಂಡ ಮೋಡಗಳ ಕೆನ್ನೆಅರಳುವ ಎಳೆಬಿಸಿಲಿಗೆಕೆಂಪಾಗುಗುತ್ತಿದೆ ದಾಸಾಳದ ಹೂಗಳುಹೂ ಕೊಯ್ಯುವ ಪುಟ್ಟಿಯಪುಟಾಣಿ ಕೈಯ ಮುದ್ದು ಮಾಡುತ್ತಿವೆ ತಡವಾಗಿ ಎದ್ದ ಮುತ್ತುಮಲ್ಲಿಗೆಹೂಗಳು ಮುಖಕ್ಕೆ ಇಬ್ಬನಿಯೆರಚಿನಿದ್ದೆಗಣ್ಣುಗಳನ್ನು ತೊಳೆಯುತ್ತಿವೆ ಕಣ್ಣು ತೆರೆದೇ ಸಣ್ಣ ನಿದ್ದೆಗೆ ಜಾರಿದಅಬ್ಬಲಿ ಹೂಗಳನ್ನುಬೀಸಿ ಬಂದ ತಂಗಾಳಿ ಮುದ್ದಿಸಿಎಬ್ಬಿಸುತ್ತಿದೆ ಹೊದ್ದ ಚಾದರ ಸರಿಸಿಮಗುವಿನ ಕನಸಿನ ಕದ ತೆರೆದುಕಣ್ಣೆವೆ ಉಜ್ಜಿಕೊಳ್ಳುತ್ತಲೇ ತೆರೆವಕೂಸಿಗೆ ಕರವೀರದ ಹೂಗಳು ಮಂದಹಾಸ ಬೀರಿವೆ ನೈದಿಲೆಯ ಮೊಗ್ಗುಗಳಿಗೆಹೂ ಮುತ್ತನಿತ್ತ ಕ್ರೌಂಚ ಪಕ್ಷಿಗಳುಹಿಮದಂತಹ ನೀರಲ್ಲಿ ತೇಲುತ್ತಿವೆಆವರಿಸಿದ ಚಳಿ ಲೆಕ್ಕಿಸದೆ ಮೊಗ್ಗುಗಳು ನಾಳೆ ಅರಳುವಖುಷಿ ಹಂಚಿಕೊಂಡರೆಪಾತರಗಿತ್ತಿಗಳು ದಿನಪತ್ರಿಕೆ ಓದುತ್ತಿವೆ ಹೂವಿನ ಪರಿಮಳವ ಹೊತ್ತೊಯ್ಯುವ ತಂಗಾಳಿಯ ರೀತಿಅಲೌಕಿಕ ಬೆಳಗಲ್ಲಿ ಅಕಾರಣ ಪ್ರೀತಿ ಎಲೆ ಎಲೆಗಳ ಮೇಲೆಕುಳಿತಿಹ ಚಿಟ್ಟೆಯ ಕಂಡುಪ್ರತಿ ಗಿಡ ತೊಟ್ಟಿವೆ ಹೂವಿನ ಬಟ್ಟೆ!! *********************************************************

ಹೂ ಬೆಳಗು Read Post »

ಅಂಕಣ ಸಂಗಾತಿ, ಚಿತ್ತ ಜನ್ಯ

ಅಂಕಣ ಬರಹ ಜ್ಞಾನವೆಂಬ ತಿಜೋರಿಯ ಕೀಲಿಕೈ… ಪುಸ್ತಕಗಳ ರಾಶಿಯನ್ನು ತಡವುವಾಗೆಲ್ಲಾ ಎಂಥದೋ ಆಪ್ತಭಾವ. ಗುಪ್ತಗೆಳೆಯನೊಬ್ಬ ಮನಕ್ಕೆ ಆಗಮಿಸಿದಂತೆ ಪ್ರತಿ ಪುಸ್ತಕವೂ ನಮ್ಮ ಅತಿ ಖಾಸಗೀತನವನ್ನು ಕೊಳ್ಳೆ ಹೊಡೆಯುತ್ತಿರುತ್ತದೆ. ನನಗೆ ಪುಸ್ತಕದ ರುಚಿ ಹತ್ತಿದ್ದು ಬಹುಶಃ ಮೂರೋ ನಾಲ್ಕನೆಯದೋ ತರಗತಿಯಲ್ಲಿದ್ದಾಗ. ಆಗ ನನ್ನ ಮನೆಗೆ ಬರುತ್ತಿದ್ದದ್ದು ದಿಕ್ಸೂಚಿ ಮಾತ್ರ. ಅದು ಖಂಡಿತ ದಿಕ್ಸೂಚಿ ಆಕರ್ಷಕವಾಗಿ ಕಾಣಿಸಬಹುದಾದ ವಯಸ್ಸು ಆಗಿರಲಿಲ್ಲ. ಆದರೆ ಒಂದು ಪುಸ್ತಕದ ಸ್ಪರ್ಶದ ಅನುಭೂತಿ ಹೇಗಿರುತ್ತದೆಂದು ತಿಳಿದದ್ದು ಮಾತ್ರ  ದಿಕ್ಸೂಚಿಯಿಂದಲೇ. ಶಾಲೆಯ ಪಠ್ಯ ಪುಸ್ತಕಗಳು ಸದಾ ನಮ್ಮೊಂದಿಗಿರುತ್ತಿದ್ದವಾದರೂ ಯಾವತ್ತಿಗೂ ಅವು ನಮಗೆ ಆತ್ಮೀಯವಾಗಿ ಕಾಣಿಸುತ್ತಿರಲಿಲ್ಲ. ಅವನ್ನು ಎಷ್ಟು ಬೇಗ ಹೊರತೆಗೆಯುತ್ತಿದ್ದೆವೋ ಅಷ್ಟೇ ಬೇಗ ಒಳ ಹಾಕಿ ಮುಚ್ಚಿಟ್ಟು ಎದ್ದರೇ ಸಮಾಧಾನ. ಆದರೆ ಕತೆಗಳ ಲೋಕ ಪರಿಚಯವಾಯ್ತು ನೋಡಿ ಪುಸ್ತಕಗಳ ರುಚಿಯೂ ಸಿಕ್ಕಿಬಿಟ್ಟಿತು. ಕತೆಗಳು ಹತ್ತಿರವಾದ ನಂತರ ಕನ್ನಡ, ಇಂಗ್ಲೀಷ್ ಮತ್ತು ಹಿಂದಿಯ ಪಾಠಗಳು ಪಾಠವಾಗಲ್ಲದೇ ಕಥೆಗಳಾಗಿಯೂ ಇಷ್ಟವಾಗತೊಡಗಿದವು. ಕವಿತೆಗಳು ಆಪ್ತ ಹಾಡಾದವು. ಇದು ಓದಿನ ರುಚಿ ಹತ್ತಿಸಿದ ಕತೆಗಳಿಂದ ಆದ ಬಹುದೊಡ್ಡ ಲಾಭ.  ಆದರೆ ಚಿಕ್ಕಂದಿನಲ್ಲಿ ಬಾಲಮಂಗಳ, ಚಂದಾಮಾಮ, ಚಂಪಕದಂತಹ ಪುಸ್ತಕಗಳ ಬಗ್ಗೆ ಇರುತ್ತಿದ್ದ ಆಕರ್ಷಣೆಯ ಮಟ್ಟ ಎಷ್ಟಿರುತ್ತಿತ್ತೆಂದರೆ ಎಲ್ಲಿಯಾದರೂ ಸಿಕ್ಕರೆ ಸಾಕು ಲಪಟಾಯಿಸಿಬಿಡಬೇಕು ಎನ್ನುವಷ್ಟು. ಆದರೆ ಲಪಟಾಯಿಸುವ ಅವಕಾಶ  ಸಿಗಲಿಲ್ಲ ಅದು ಬೇರೆ ಮಾತು. ಮನೆಯಲ್ಲಿ ಕೊಡಿಸಿ ಎಂದು ದುಂಬಾಲುಬಿದ್ದರೆ ದಿಕ್ಸೂಚಿ ಓದು ಎನ್ನುವ ಉತ್ತರ ಬರುತ್ತಿತ್ತು. ದಿಕ್ಸೂಚಿಯ ಪುಟ ತಿರುವುವಾಗ ಎಂಥದೋ ನಿರಾಸೆ… ಅಲ್ಲಿ ಎಲ್ಲಿಯಾದರೂ ಇತಿಹಾಸದ ರಾಜರ ಕತೆಗಳಿದ್ದರೆ ಕಣ್ಣುಗಳು ಕೊಂಚ ಮಿಂಚುತ್ತಿದ್ದವು. ಒಂದಷ್ಟು ವರ್ಷ ದಿಕ್ಸೂಚಿಯಲ್ಲಿ ನಾಗರೀಕತೆಗಳ ಬಗ್ಗೆ ಸಚಿತ್ರ ವಿವರಣೆ ಬರುತ್ತಿತ್ತು. ಅದು ಸ್ವಲ್ಪ ಆಸಕ್ತಿ ಹುಟ್ಟಿಸುತ್ತಿತ್ತು. ಆದರೆ ಬಾಲಮಂಗಳದ ಕತೆಗಳ ಮುಂದೆ ಮೃಷ್ಟಾನ್ನದ ಮುಂದೆ ಇಟ್ಟ ಮುದ್ದೆಯ ಹಾಗೆ ಸಪ್ಪೆ ಸಪ್ಪೆ… ನನ್ನ ಗೆಳತಿಯೊಬ್ಬಳು ತನ್ನಲ್ಲಿರುತ್ತಿದ್ದ ಬಾಲಮಂಗಳ ಪುಸ್ತಕವನ್ನು ಆಗಾಗ ಶಾಲೆಗೆ ತರುತ್ತಿದ್ದಳು. ಅದನ್ನು ನೋಡುವಾಗೆಲ್ಲಾ ಇವಳೆಷ್ಟು ಅದೃಷ್ಟವಂತಳು, ಇವಳ ಅಮ್ಮ  ಇವಳಿಗೆ ಓದಲು ಕತೆ ಪುಸ್ತಕ ಕೊಡಿಸುತ್ತಾರಲ್ಲಾ ಎಂದು ಕರುಬುತ್ತಿದ್ದೆ. ರಜೆ ಸಿಕ್ಕಾಗ ಅವಳ ಮನೆಗೆ ಬಾಲ ಮಂಗಳವನ್ನು ನೋಡಲಿಕ್ಕೆಂದೇ ಹೋದದ್ದಿದೆ. ಆದರೆ ಅವನ್ನು ದೂರದಿಂದ ನೋಡಬಹುದಿತ್ತಷ್ಟೇ, ಮುಟ್ಟುವಂತಿರಲಿಲ್ಲ. ಇರಲಿ ಆ ಗೆಳತಿ ಕನಿಷ್ಟ ನೋಡಲು ಬಿಟ್ಟಿದ್ದಳಲ್ಲಾ… ಅದೇ ಸಮಾಧಾನ. ಈ ಪರಿಸ್ಥಿತಿಯನ್ನು ದಾಟುತ್ತಿರುವಾಗ ಅಚಾನಕ್ ನನಗೆ ಸಿಕ್ಕ ದೊಡ್ಡ ನಿಧಿ ಎಂದರೆ ಲೈಬ್ರರಿ ಕಾರ್ಡ್.  ನಾನು ಐದನೇ ತರಗತಿಯಲ್ಲಿದ್ದಾಗ ಬಹುಶಃ ನನ್ನಪ್ಪ ನನಗದನ್ನು ಮಾಡಿಸಿಕೊಟ್ಟದ್ದು. ನಂತರ ಅಲ್ಲಿದ್ದ ಪಂಚತಂತ್ರದ ಕತೆಗಳಿಂದ ಹಿಡಿದು ಎಲ್ಲಾ ರೀತಿಯ ಕತೆಗಳನ್ನೂ ಒಂದು ಕಡೇಯಿಂದ ಓದಿ ಮುಗಿಸಿದ್ದೆ. ಪರೀಕ್ಷೆಗಳಿದ್ದಾಗಲೂ ಕತೆ ಪುಸ್ತಕಗಳನ್ನು, ಪಠ್ಯಪುಸ್ತಕದ ನಡುವೆ ಬಚ್ಚಿಟ್ಟುಕೊಂಡು ಓದಲು ಹೋಗಿ ಅಪ್ಪನ ಕೈಗೆ ಸಿಕ್ಕುಬಿದ್ದು ಬೈಸಿಕೊಂಡದ್ದೂ ಇದೆ. ಹೈಸ್ಕೂಲು ಮುಗಿದು ಕಾಲೇಜು ಮೆಟ್ಟಿಲು ಹತ್ತಿದಾಗ ನಾನು ನನ್ನ ಜೀವನದ ಮೊಟ್ಟ ಮೊದಲ ಸಾಮಾಜಿಕ ಕಾದಂಬರಿ ಓದಿದ್ದು. ನಾನು ಓದಿದ ಮೊದಲ ಕಾದಂಬರಿ ಉಷಾನವರತ್ನರಾಮರ ಬಿರುಕು. ಆ ಕತೆಯ ಧರಣಿ, ಚಾರುದಾಸ್, ಅವರ ಮುದ್ದಾದ ಮಗಳು ಈಶಾನ್ಯ… ಪ್ರತಿ ಪಾತ್ರವೂ ಇಂದಿಗೂ ಮನಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಅದೆಷ್ಟೋ ಬಾರಿ ಆ ಪಾತ್ರಗಳು ನನ್ನನ್ನು ವಿಪರೀತ ಕಾಡಿವೆ. ಆ ವಯಸ್ಸೇ ಅಂಥದ್ದು. ಕಾದಂಬರಿಯ ಪಾತ್ರವನ್ನೇ ಆವಾಹಿಸಿಕೊಂಡು ಅನುಭವಿಸುವಂತಹ ವಯಸ್ಸು.  ನಂತರ ಓದಿನ ಸಲುವಾಗಿ ನಗರದ ಹಾಸ್ಟೆಲ್ಲಿಗೆ ಬಂದೆ. ಅಲ್ಲಿ ನಮ್ಮ ಹಾಸ್ಟೆಲ್ ಎದುರಿಗೆ ಒಂದು ಸಣ್ಣ ಹೋಟೆಲ್ ಇತ್ತು. ಅದರ ಮುಂಭಾಗದ ಶೋಕೇಸಿನಲ್ಲಿ ಕುವೆಂಪುರವರು ಬರೆದ ರಾಮಕೃಷ್ಣ ಪರಮಹಂಸರು ಮತ್ತು ವಿವೇಕಾನಂದರ ಜೀವನ ಚರಿತ್ರೆಗಳನ್ನು ಇಟ್ಟಿರುತ್ತಿದ್ದರು. ದಿನಾ ಅವನ್ನು  ಗಮನಿಸುತ್ತಿದ್ದ ನಾನು ಒಮ್ಮೆ ತಡೆಯಲಾಗದೆ ಆ ಪುಸ್ತಕವನ್ನು ಕೊಡುತ್ತೀರಾ ಓದಿ ತಂದುಕೊಡುವೆ ಎಂದು ಕೇಳಿಯೇಬಿಟ್ಟಿದ್ದೆ. ಒಂದೆರೆಡು ದಿನ ಇಲ್ಲ ಎನ್ನುತ್ತಾ ಸತಾಯಿಸಿದ  ಹೋಟೇಲಿನ ಮಾಲೀಕರು, ಕೊನೆಗೆ ನಾ ಯಕೋ ಬಿಡೋ ಗಿರಾಕಿ ಅಲ್ಲ ಅನಿಸಿ ಒಂದಿನ ವಿವೇಕಾನಂದರ ಜೀವನ ಚರಿತ್ರೆಯನ್ನು ಮಾತ್ರ ಕೊಟ್ಟರು. ಅವತ್ತು ಆ ಪುಸ್ತಕವನ್ನು ಕೈಯಲ್ಲಿ ಹಿಡಿದದ್ದೇ ಒಂದು ರೋಮಾಂಚನ. ಅದರ ಓದು ನನ್ನಲ್ಲಿ ತಂದ ಬದಲಾವಣೆಯೂ ಒಂದು ಅದ್ಭುತವೇ ಸರಿ. ಆ ಅದ್ಭುತವೇ ಮೂರು ವರ್ಷಗಳ ಕಾಲ ಹಾಸ್ಟೆಲ್ಲಿನಲ್ಲಿದ್ದಾಗ ನನ್ನನ್ನು ತಿದ್ದಿದೆ, ಬುದ್ಧಿ ಹೇಳಿದೆ, ಸಮಾಧಾನಿಸಿದೆ, ಸರಿ ದಾರಿಯಲ್ಲಿ ನಡೆಸಿದೆ. ಆ ಪುಸ್ತಕವನ್ನು ವಾರಕ್ಕೆ ಮುಂಚೆಯೇ ಒಂದು ಮುಕ್ಕು ಬಾರದಂತೆ ಜೋಪಾನವಾಗಿಟ್ಟುಕೊಂಡು, ಓದಿ ಮುಗಿಸಿ ಹೋಟೇಲಿನ ಅಂಕಲ್ (ಇಷ್ಟು ದಿನಗಳಲ್ಲಿ ಅವರೀಗ ಅಂಕಲ್ ಆಗಿ ಬದಲಾಗಿದ್ದದ್ದೂ ಸೋಜಿಗ…) ಗೆ ಮರಳಿ ತಂದು ಕೊಟ್ಟಾಗ ಅವರ ಮುಖದಲ್ಲಿ ಒಂದು ಸಣ್ಣ ಸಂತೋಷ ಮತ್ತು ಮೆಚ್ಚುಗೆ ಇತ್ತು. ಮರಳಿ ಪಡೆದ ಪುಸ್ತಕವನ್ನು ಅದಿದ್ದ ಜಾಗದಲ್ಲೇ ಇಟ್ಟು, ಸದ್ದಿಲ್ಲದೇ ನಾ ಕೇಳದೆಯೇ ರಾಮಕೃಷ್ಣರ ಪುಸ್ತಕವನ್ನು ತಂದು ನನ್ನ ಕೈಗೆ ಇತ್ತಿದ್ದರು. ನನ್ನ ಕಣ್ಣಲ್ಲಿ ಕೃತಜ್ಞತೆಯ ಮಹಾಪೂರ… ಖುಷಿಯ ಉತ್ತುಂಗದಲಿ ನಾನಿದ್ದೆ. ಮತ್ತೊಂದು ವಾರದ ನನ್ನ ಓದು ಸಂಪನ್ನವಾಗಿತ್ತು. ಅಲ್ಲಿಂದ ಮುಂದಕ್ಕೆ ಪುಸ್ತಕಗಳನ್ನು ನಾನು ಹುಡುಕಿ ಹೊರಡಲು ಶುರುಮಾಡಿದೆ. ಎಲ್ಲೇ ಪುಸ್ತಕ ಕಾಣಲಿ ಅದು ನನಗೆ ಬೇಕು ಅನಿಸುತ್ತಿತ್ತು. ನನ್ನ ಪಾಕೆಟ್ ಮನಿಯ ಬಹುಭಾಗ ಪುಸ್ತಕಗಳಿಗೇ ಖರ್ಚಾಗುತ್ತಿತ್ತು. ಇನ್ನು ನಾನು ಯಾವ ಯಾವ ಊರಿನಲ್ಲಿರುತ್ತಿದ್ದೆನೋ ಅಲ್ಲೆಲ್ಲಾ ಒಂದೊಂದು ಲೈಬ್ರರಿ ಕಾರ್ಡ್ ಇರುತ್ತಿತ್ತು ನನ್ನ ಬಳಿ. ಇನ್ನು ನೌಕರಿ ಸಿಕ್ಕಾಗ ಆದ ಮೊದಲ ಆನಂದವೆ ಇನ್ನು ಮುಂದೆ ಸ್ವಂತ ಖರ್ಚಿನಲ್ಲಿ ಪುಸ್ತಕ ಕೊಳ್ಳಬಹುದು ಎಂಬುದು. ಅದು ಮತ್ತೊಂದೇ ಮಟ್ಟಿಗಿನ ಖುಷಿ. ನನ್ನ ಆಸಕ್ತಿ ಎಷ್ಟು ವೈವೀಧ್ಯವಿರುತ್ತಿತ್ತೋ ಅಷ್ಟೇ ರೀತಿಯ ಪುಸ್ತಕಗಳನ್ನು ನಾನು ಓದುತ್ತಿದ್ದದ್ದು. ಸಾಹಿತ್ಯ, ವ್ಯಕ್ತಿತ್ವ ವಿಕಸನ, ಆಧ್ಯಾತ್ಮ, ಸಂಗೀತ, ಜ್ಯೋಯಿಷ್ಯ, ಸಂಖ್ಯಾಶಾಸ್ತ್ರ… ಹೀಗೆ ನಾನಾ ಬಗೆಯ ಪುಸ್ತಕಗಳಿರುತ್ತಿದ್ದವು ನನ್ನ ಬಳಿ. ನನ್ನ ಗೆಳತಿಯರು ಕೆಲವೊಮ್ಮೆ ಶಾಸ್ತ್ರ ಕೇಳಲು ಬರುತ್ತಿದ್ದರು ನನ್ನ ರೂಮಿಗೆ. ಈಗ ನೆನೆದರೆ ನಗು ಬರುತ್ತದೆ. ಈಗಲೂ ಆ ಎಲ್ಲ ಪುಸ್ತಕಗಳೂ ಇವೆ… ಎಲ್ಲೋ ಮೂಲೆಯಲ್ಲಿ. ಅಪ್ಪ ಒಮ್ಮೆ ತಮಾಷೆಗೆ, “ಸುಮ್ನೆ ಒಂದು ಬೋರ್ಡ್ ಹಾಕ್ಕೊಂಡು, ಪಂಚಾಂಗ ಇಟ್ಕೊಂಡು ಕೂತುಬಿಡು ಹೋಗ್ಲಿ, ಒಂಚೂರು ಸಂಪಾದನೆಯಾದ್ರೂ ಆಗುತ್ತೆ…” ಅಂತ ಹೇಳಿ ಹೇಳಿ ನಗಾಡಿದ್ರು. ಆದ್ರೆ ಯಾರೇನೇ ಹೇಳಲಿ, ನನಗೆ ಆಸಕ್ತಿ ಹುಟ್ಟಿದ್ದನ್ನೆಲ್ಲಾ ನಾ ಓದಿದ್ದೇ ಸೈ ಎನ್ನುವಂತೆ ಓದುತ್ತಿದ್ದೆ ಆಗ. ತುಷಾರ, ಮಯೂರ, ಓ ಮನಸೇ, ಸುಧಾ, ತರಂಗ… ತಪ್ಪದೇ ನನ್ನ ಕೋಣೆ ಸೇರುತ್ತಿದ್ದವು. ನಾನಾಲ್ಕು ನ್ಯೂಸ್ ಪೇಪರ್ ಹಾಕಿಸಿಕೊಳ್ತಿದ್ದೆ ಮನೆಗೆ. ಅಕ್ಕಪಕ್ಕದವರು ಒಂದು ರೀತಿ ಹುಚ್ಚರನ್ನು ನೋಡುವ ಹಾಗೆ ನೋಡುತ್ತಿದ್ದರು. ಒಂದೆರೆಡು ಮಂದಿ ತಮ್ಮ ಮನೆಗೆ ನ್ಯೂಸ್ ಪೇಪರ್ ಹಾಕಿಸಿಕೊಳ್ಳುವುದನ್ನೇ ಬಿಟ್ಟುಬಿಟ್ಟಿದ್ದರು. ಇಲ್ಲಿಯೇ ಬಂದು ಓದಿ ಹೋದರಾಯಿತು ಎಂದುಕೊಂಡು. ಅವರು ಬಂದು ಕೇಳಿದಾಗ ನನಗೂ ಇಲ್ಲ ಎನ್ನಲು ಸಾಧ್ಯವಿರುತ್ತಿರಲಿಲ್ಲ.  ವಾರವಿಡೀ ಕೆಲಸಕ್ಕೆ ಹೋಗುವ ತರಾತುರಿ. ಸಿಗುತ್ತಿದ್ದ ಒಂದೇ ಒಂದು ದಿನದ ಬಿಡುವು ಭಾನುವಾರ. ಭಾನುವಾರದಂದು ನಾ ಮಾಡುತ್ತಿದ್ದ ಮೊಟ್ಟ ಮೊದಲ ಕೆಲಸವೇ ಲೈಬ್ರರಿಗೆ ಹೋಗಿ ಅಲ್ಲೊಂದಿಷ್ಟು ಹೊತ್ತು ಪುಸ್ತಕಗಳನ್ನು, ನೋಡಿ, ಮುಟ್ಟಿ, ತಡವಿ ಕೊನೇಗೆ  ಯಾವುದೋ ತುಂಬಾ ಬಿಡಲಾಗದ ಮೂರು ಪುಸ್ತಕಗಳಿಗೆ ಡೇಟ್ ಹಾಕಿಸಿಕೊಂಡು ತರುತ್ತಿದ್ದದ್ದು. ಅಷ್ಟಕ್ಕೂ ಡೇಟ್ ಹಾಕಿಸಿಕೊಂಡು ಬರುವ ಅವಶ್ಯಕತೆಯೇ ಇರುತ್ತಿರಲಿಲ್ಲ. ಕಾರಣ ನಾಲ್ಕೈದು ದಿನಗಳೊಳಗಾಗಿಯೇ ಅವು ಲೈಬ್ರರಿಗೆ ಮರಳಿಬಿಡುತ್ತಿದ್ದವು. ಮತ್ತೆ ಹೊಸಪುಸ್ತಕಗಳು ಮನೆ ಸೇರುತ್ತಿದ್ದವು. ಇದೊಂದು ಮಾತ್ರ ಯಾವಾಗಲೂ ಹೀಗೆ ನಡೆಯುತ್ತಿತ್ತು. ಹಾಗಾಗಿ ಲೈಬ್ರೇರಿಯನ್ನೂ ಮೂರು ಕೊಡೋ ಜಾಗದಲ್ಲಿ ನಾಲ್ಕು, ಐದು ಪುಸ್ತಕಗಳನ್ನೂ ಕೊಟ್ಟು ಕಳಿಸಿಬಿಡುತ್ತಿದ್ದ. ಭಾನುವಾರ ಬಂತೆಂದರೆ ಪೂರ್ತಿ ಎಲ್ಲ ಪೇಪರ್ರುಗಳ ಅಡಿಶನಲ್ಸ್ ಗಳನ್ನು ಓದುವುದರಲ್ಲೇ ಮುಗಿಯುತ್ತಿತ್ತು. ಯಾವುದನ್ನು ಬೇಕಾದರೂ ತಪ್ಪಿಸಿ ಬಿಡುತ್ತಿದ್ದೆನೇನೋ ಆದರೆ ಇದನ್ನು ಬಿಡುವುದು ಸಾಧ್ಯವಿರುತ್ತಿರಲಿಲ್ಲ. ಹಾಗೆ ಲೋಕದ ಅರಿವಿಲ್ಲದೆ ಓದುತ್ತಾ ಕಾಲ ಕಳೆದುಬಿಡುವುದೂ ಒಂಥರಾ  ಸುಖ.  ಈಗ ಇವೆಲ್ಲಾ ನೆನಪುಗಳೂ ನನಗೇ ಒಂದು ನಮೂನಿ ದಂತಕಥೆಗಳಂತೆ ಕಾಣಿಸುತ್ತವೆ. ಕಾರಣ ಮದುವೆ, ಸಂಸಾರ, ಮಕ್ಕಳು, ಕೆಲಸ…  ಒಟ್ಟಾರೆ ಧಾವಂತದ ಈ ಬದುಕಿನ ನಡುವೆ ಓದುವ ಸುಖ ಕಳೆದುಹೋಗಿದೆ. ಸಿಗುವ ಸಣ್ಣ ಸಣ್ಣ ಸಮಯದ ತುಣುಕುಗಳನ್ನು ಜೋಡಿಸಿಕೊಂಡು ಒಂದೊಂದೇ ಪುಸ್ತಕವನ್ನು ಪ್ರೀತಿಯಿಂದ ಮುಗಿಸಬೇಕಾಗಿ ಬರುತ್ತದೆ. ಆದರೆ ಓದುವ ಪ್ರೀತಿ ಇನ್ನೂ ಬತ್ತಿಲ್ಲ, ಸ್ವಲ್ಪವೂ ಸೊರಗಿಲ್ಲ, ಬದಲಿಗೆ ದುಪ್ಪಟ್ಟಾಗಿದೆ ಎನ್ನುವುದೇ ಖುಷಿಯ ವಿಚಾರ.  ನಾವೆಲ್ಲಾ ಓದಿನ ಬಗ್ಗೆ ಚರ್ಚಿಸುತ್ತಾ, ಓದಿನ ಸುಖಕ್ಕಾಗಿ ಪುಸ್ತಕಗಳ ಕನಸುತ್ತಾ ಕೂತಿರುವಾಗ ನಮ್ಮ ಮಕ್ಕಳು ಅದಕ್ಕಿಂತ ಭಿನ್ನವಾಗಿ ಬೆಳೆಯುತ್ತಿದ್ದಾರೆ. ಆದರೆ ಆ ಭಿನ್ನತೆ  ನಮ್ಮಲ್ಲಿ ಆತಂಕ ಹುಟ್ಟಿಸುತ್ತಿದೆ. ಮಕ್ಕಳಿಗೀಗ ಪುಸ್ತಕಗಳು ಬೇಕಿಲ್ಲ. ದೃಷ್ಯ ಮಾಧ್ಯಮದ ಎದುರು ಸಪ್ಪಗೆ ಕಾಣುವ ಪುಸ್ತಕಗಳನ್ನು ಅವರು ಮೂಸುವುದೇ ಇಲ್ಲ. ಡಿಜಿಟಲ್ ಲೈಬ್ರರಿ, ಇ ಬುಕ್ಸ್… ಹೀಗೆ ಎಲ್ಲವೂ ಮೊಬೈಲು, ಕಂಪ್ಯೂಟರಿನ ಮುಂದೆಯೇ ನಡೆಯಬೇಕು. ಅವರಿಗಾಗಿ ಕೂಡಿಟ್ಟ ಪುಸ್ತಕಗಳು, ಇಟ್ಟಲ್ಲೇ ಮುಲುಗುತ್ತವೆ. ಆದರೆ ಬುದ್ಧಿ ಮತ್ತು ಮೆದುಳಿಗೆ ಪುಸ್ತಕಕ್ಕಿಂತ ದೊಡ್ಡ ಆಹಾರವಿಲ್ಲ ಮತ್ತು ಕಣ್ಣಿಗೂ ಒಳ್ಳೆಯದು. ಇದನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಡುವುದಾದರೂ ಹೇಗೆ ಎನ್ನುವುದೇ ಚಿಂತೆ. ಆದರೆ ನನ್ನ ತರಗತಿಯಲ್ಲಿ ಒಬ್ಬ ಹುಡುಗನಿದ್ದಾನೆ. ಬಹಳಾ ಚೂಟಿ, ತರಲೆ, ಕಿತಾಪತಿ, ತುಂಬಾ ಬುದ್ಧಿವಂತ ಮೇಲಾಗಿ ಕವಿ ಕತೆಗಾರ. ತುಂಬಾ ಬಡತನವಿರುವ ಮನೆಯಿಂದ ಅವ ಶಾಲೆಗೆ ಬರುತ್ತಾನೆ. ಆದರೆ ಪುಸ್ತಗಳ ಬಗ್ಗೆ ಅವನಿಗೆ ಅಪಾರ ಪ್ರೀತಿ.  ಎಲ್ಲೇ ಪುಸ್ತಕ ಸಿಕ್ಕರೂ ಅವನಿಗದು ಬೇಕು. ತನ್ನ ಓರಗೆಯವರಿಗಿಂತಲೂ ಹೆಚ್ಚಿನ ಜ್ಞಾನ ಅವನದು. ಅವನಿಗೆ ಆಗಾಗ ಒಂದಷ್ಟು ಪುಸ್ತಕಗಳನ್ನು ಕೊಡುತ್ತಿರುತ್ತೇನೆ. ಕಳೆದ ಬಾರಿ The magic of the lost temple ಎನ್ನುವ ಸುಧಾಮೂರ್ತಿಯವರ ಒಂದು ಪುಸ್ತಕ ಕೊಟ್ಟಿದ್ದೆ. ಅವನಿನ್ನೂ ನನಗೆ ಮರಳಿಸಿಲ್ಲ. ಒಂದುವೇಳೆ ಕೊಡದಿದ್ದರೂ ತೊಂದರೆ ಏನಿಲ್ಲ. ನನಗೆ ಗೊತ್ತು ಅದನ್ನವನು ಜೀವನಪರ್ಯಂತ ನನಗಿಂತಲೂ ಜೋಪಾನವಾಗಿ ಇಟ್ಟುಕೊಂಡಿರುತ್ತಾನೆ ಎಂದು. ************************************************************* –ಆಶಾಜಗದೀಶ್ ಶಿಕ್ಷಕಿ, ಗೌರಿಬಿದನೂರಿನಲ್ಲಿ ವಾಸಮೊದಲ ಪುಸ್ತಕ ಮೌನ ತಂಬೂರಿ- ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಹೊಂಡಿದೆ. ನಾದಾನುಸಂಧಾನ- ಅಂಕಣ ಬರಹದ ಪುಸ್ತಕ, ಮಳೆ ಮತ್ತು ಬಿಳಿಬಟ್ಟೆ- ಕಥಾ ಸಂಕಲನ ಮತ್ತು ನಡು ಮಧ್ಯಾಹ್ನದ ಕಣ್ಣು- ಕವನ ಸಂಕಲನ (ಅಚ್ಚಿನಲ್ಲಿದೆ) ಈ ವರ್ಷ ಹೊರಬರಲಿರುವ ಪುಸ್ತಕಗಳು. ಕರ್ನಾಟಕ ಲೇಖಕಿಯರ ಸಂಘದ ಗುಡಿಬಂಡೆ ಪೂರ್ಣಿಮಾ ದತ್ತಿನಿಧಿ ಬಹುಮಾನ, ಪ್ರಜಾವಾಣಿ ದೀಪಾವಳಿ ಕವನ ಸ್ಪರ್ಧೆಯಲ್ಲಿ ಮೆಚ್ಚುಗೆ ಗಳಿಸಿದ ಕವಿತೆ, ಜೀವನ್ ಪ್ರಕಾಶನದ ಯುಗಾದಿ ಕವನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಪ್ರಜಾವಾಣಿ ಸಂಕ್ರಾಂತಿ ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಸುಧಾ ಯುಗಾದಿ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಬಹುಮಾನ, ಮುಂಬೈನ ಶ್ರೀ ಜಗಜ್ಯೋತಿ ಕಲಾಸಂಘ ನೀಡುವ ಸುಶೀಲಾ ಶೆಟ್ಟಿ ಕಥಾ ಪ್ರಶಸ್ತಿ… ಇನ್ನು ಮುಂತಾದ ಬಹುಮಾನಗಳು ಬಂದಿವೆ.

Read Post »

ಅಂಕಣ ಸಂಗಾತಿ, ಹೊಸ ದನಿ-ಹೊಸ ಬನಿ

ಅಂಕಣ ಬರಹ ಹೊಸ ದನಿ ಹೊಸ ಬನಿ – ೧೦. ಹಂಗೆ ಇಲ್ಲದ ಖಬರಿನೊಳಗ ಏನೊ ಗುನುಗಿದ್ಹಾಂಗ ಚಂ ಸು ಕವಿತೆಗಳು ರಾಣೇಬೆನ್ನೂರು ಸಮೀಪ ಕೂನಬೇವು ಗ್ರಾಮದ ಸಾಹಿತಿ ಚಂಸು (ಚಂದ್ರಶೇಖರ ಸುಭಾಸ ಗೌಡ ಪಾಟೀಲ ಅಂದರೆ ಯಾರಿಗೂ ಗೊತ್ತಾಗುವುದಿಲ್ಲ!) ಅವರ “ಬೇಸಾಯದ ಕತಿ” ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ೨೦೧೮ನೇ ಸಾಲಿನ ಸಿಂಪಿ ಲಿಂಗಣ್ಣ ದತ್ತಿ (ಜೀವನಚರಿತ್ರೆ) ಪ್ರಶಸ್ತಿ ಪ್ರಕಟವಾದಾಗ ಅವರನ್ನು ಅಭಿನಂದಿಸಲು ಫೋನ್ ಮಾಡಿದ್ದೆ.  ಆ ಲೇಖನಗಳಲ್ಲಿ ಕೆಲವನ್ನು ಓದಿದ್ದರಿಂದಾಗಿ ಬೇಸಾಯದ ಬದುಕಿನ ಹಿಂದಣ ಕಷ್ಟ ಕಾರ್ಪಣ್ಯಗಳ ಕುರಿತು ಮಾತೆತ್ತಿದೆ. “ಅಯ್ಯೋ ಅದು ನಂದು ಒಬ್ಬನ್ನದೇ ಅಲ್ರೀ ಎಲ್ಲ ರೈತ ಮಕ್ಳ ಕತೇರೀ” “ಅಲ್ರೀ ನನ್ ಸಂಕಲ್ನದ ಬಗ್ಗೆ ಬರೆದವ್ರೂ ನೀವೊಬ್ರೇ, ಈಗ ಬಹುಮಾನ ಬಂತಂತ ಫೋನ್ ಮಾಡಿದವ್ರೂ ನೀವೇರೀ” ” ಶಿಶುನಾಳದಾಗ ಭೆಟ್ಟಿಯಾಗಿ ಇಪ್ಪತ್ತೊರ್ಸ ಆದ್ರೂ ನೆಪ್ಪಿಟ್ಟೀರಿ” ಎಂದು ಮಾತಾಡಿದ ಚಂಸು ದನಿಯಲ್ಲಿ ಈವರೆಗಿನ ಅವರ ಮೂರೂ ಕವನ ಸಂಕಲನಗಳಲ್ಲಿ ಕಂಡರಿಸಿದ್ದ ಬಂಡಾಯದ ಮೊಳಗು ಮತ್ತು ಮೊಹರು ಅವರ ಮಾತಲ್ಲಿ ಬತ್ತಿ ಹೋಗಿತ್ತು. ಹ್ಯಾಗಾದರೂ ಬದುಕು ಸಾಗಿಸಿದರೆ ಸಾಕು ಅನ್ನುವ ವ್ಯಥೆಯೂ ತುಂಬಿ ಕೊಂಡಂತಿತ್ತು. ಚಂಸು “ಬೇಸಾಯದ ಕತಿ” ಅನ್ನುವ ಶೀರ್ಷಿಕೆಯಲ್ಲಿ ತಮ್ಮ ಕೃಷಿ ಅನುಭವಗಳನ್ನು ಪತ್ರಿಕೆಯೊಂದರಲ್ಲಿ ಬರೆಯುತ್ತಿದ್ದರು. ರಾಸಾಯನಿಕಗಳನ್ನು ಬಳಸದೇ ಸಹಜ ಕೃಷಿಯಲ್ಲೇ ಇಳುವರಿ ಕಡಿಮೆಯಾದರೂ ಲುಕ್ಸಾನು ಇಲ್ಲವೆಂಬ ಅವರ ಅನುಭವ ಇತ್ತೀಚೆಗೆ ಎಲ್ಲ ರೈತರಿಗೂ ಮಾದರಿಯಾಗಿದೆ. ೧೯೯೫ರಲ್ಲಿ ಗೆಳೆಯನಿಗೆ, ೨೦೦೪ ರಲ್ಲಿ ಕೆಂಪು ಕಂಗಳ ಹಕ್ಕಿ ಮತ್ತದರ ಹಾಡು, ೨೦೦೯ರಲ್ಲಿ ಅದಕ್ಕೇ ಇರಬೇಕು ಎನ್ನುವ ಕವನಸಂಕಲಗಳನ್ನು ಪ್ರಕಟಿಸಿರುವ ಚಂಸು ಪಾಟೀಲ್ ೨೦೦೨ ರಿಂದ ೨೦೦೬ ರವರೆಗೆ ನೋಟ, ಕ್ರಾಂತಿ, ಸಂಯುಕ್ತ ಕರ್ನಾಟಕ ಪತ್ರಿಕೆಗಳಲ್ಲಿ ಉಪಸಂಪಾದಕರಾಗಿಯು ಕೆಲಸ ನಿರ್ವಹಿಸಿದ್ದಾರೆ. ೨೦೦೭ ರಿಂದ ರಾಣೇಬೆನ್ನೂರಿಗೆ ಅಂಟಿದಂತಿರುವ ಕೂನಬೇವು ಗ್ರಾಮದಲ್ಲಿ ನೆಲೆಸಿದ್ದು ಸಹಜ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರ ಮೂರು ಸಂಕಲನದ ಎಷ್ಟು ಕವಿತೆಗಳನ್ನು ಜನ ಓದಿದ್ದರೋ ಇಲ್ಲವೋ ಆದರೆ ಮೂರು ಸಾವಿರಕ್ಕೂ ಮೀರಿದ ಅವರ ಫೇಸ್ಬುಕ್ ಗೆಳೆಯರ ಬಳಗದಲ್ಲಿ ಅವರು ಹೊಸದೊಂದು ಕವಿತೆ ಪ್ರಕಟಿಸಿದ ಕೂಡಲೇ ಹಲವರು ಲೈಕುಗಳನ್ನು ಕೊಡುತ್ತಾರೆ. ಮತ್ತು ಮೇಲ್ನೋಟಕ್ಕೆ ಸಾಧಾರಣ ಶೈಲಿಯ ಹಾಸ್ಯದಂತೆ ಕಂಡರೂ ಆಂತರ್ಯದಲ್ಲಿ ವಿಷಾದವೇ ಅವರ ಎಲ್ಲ ಕವಿತೆಗಳಲ್ಲೂ ಸ್ಥಾಯಿಯಾಗಿ ಇರುತ್ತದೆ. ಬಂಡಾಯದ ದನಿ ಇಂಗಿ ಹೋಗಿದ್ದರೂ ಒಟ್ಟೂ ವ್ಯವಸ್ಥೆಯೊಳಗಿನ ದೌರ್ಬಲ್ಯಗಳನ್ನು ಅವರು ಶಕ್ತವಾಗಿ ದಟ್ಟವಾಗಿ ಹೇಳುತ್ತಾರೆ. ರೈತ ವಿರೋಧೀ ನಿಲುವನ್ನು ಪ್ರಶ್ನಿಸುವ ಅವರ ಕವಿತೆಗಳ ಮುಖ್ಯ ಸ್ಥಾಯಿಯೇ ರೈತನ ನಿತ್ಯ ಬದುಕಿನ ಸಮಸ್ಯೆಗಳು ಆಗಿರುವುದನ್ನು ಗಮನಿಸಲೇ ಬೇಕು. ಇವನಿಗೇಕೆ ಕವಿತೆಯ ಉಸಾಬರಿ? ತತ್ವಮೀಮಾಂಸಕರು ಕಾವ್ಯವಿಮರ್ಶಕರು ತಗಾದೆ ತೆಗೆದರು…. ಈ ಇಳೆಗೆ ಬೆಳೆಗೆ ತಗುಲಿದ ಕಳೆ ತೆಗೆಯುವುದು ಹೇಗೆಂದು ನಾ ಚಿಂತೆಗೆ ಬಿದ್ದಿರುವೆ! ಕವಿತೆ ಬರೆಯುವಾಗಲೂ ರೈತನ ಸಮಸ್ಯೆಯೇ ಇವರ ಕಾವ್ಯದ ಪ್ರತಿಮೆಗಳಾಗುವುದು ವಿಶೇಷ. ಹಸಿರು ಟವೆಲ್ ಕಟ್ಟಿಕೊಂಡು ಉದ್ದುದ್ದದ ಭಾಷಣ ಹೊಡೆಯುವವರು ಈ ಕವಿಯಿಂದ ಕಲಿಯಬೇಕಾದ್ದು ಬಹಳ ಇದೆ. ಇಲ್ಲ, ಇಲ್ಲ ನಾವು ಬದಲಾಗುವುದೇ ಇಲ್ಲ! ಎಂದು ಪ್ರತಿ ಅನುಪಲ್ಲವಿಯಲ್ಲಿ ಕೊನೆಯಾಗುವ ಕವಿತೆಯ ಆಂತರ್ಯ ಇಡೀ ಜಗತ್ತೇ ಬದಲಾದರೂ ಬದಲಾಗದ ಮನುಷ್ಯನ ಮಿತಿಯ ಬಗ್ಗೆ ಹೇಳುತ್ತದೆ. ಇಡೀ ಪದ್ಯ ಧೇನಿಸಿದ ಸಂಗತಿ ಕಡೆಯಲ್ಲಿ ಹೀಗೆ ವರ್ಣಿತವಾಗುತ್ತದೆ; ಮೋಡದಂತೆ ಕರಗುತ್ತೇವೆ; ನಿಜ, ಯಾರ ದಾಹವನ್ನೂ ಇಂಗಿಸುವುದಿಲ್ಲ! ಹೆಮ್ಮರವಾಗಿ ಬೆಳೆಯುತ್ತೇವೆ; ನಿಜ, ಯಾರ ಹಸಿವೆಯನ್ನೂ ಪೊರೆಯುವುದಿಲ್ಲ! ಮಳೆಬಿಲ್ಲಿನಂತೆ  ಬಣ್ಣಗಟ್ಟುತ್ತೇವೆ; ನಿಜ, ಎಲ್ಲರ ಸಂಭ್ರಮವಾಗಿ ಮೂಡುವುದಿಲ್ಲ! ನಕ್ಷತ್ರ‌ದಂತೆ ಮಿನುಗುತ್ತೇವೆ; ನಿಜ, ಯಾರ ಬದುಕನ್ನೂ ಬೆಳಗುವುದಿಲ್ಲ! ಬದಲಾಗುತ್ತಲೆ ಇದೆ ಜಗತ್ತು ಇಲ್ಲ, ಇಲ್ಲ ನಾವು ಮಾತ್ರ ಬದಲಾಗುವುದೇ ಇಲ್ಲ! ಪ್ರಾಯಶಃ ಪದ್ಯ ಇಲ್ಲಿಗೇ ಆಗಿದ್ದಿದ್ದರೆ ಕವಿತೆ ಗೆಲ್ಲುತ್ತಿತ್ತು. ಆದರೆ ತನ್ನ ಹೇಳಿಕೆಯನ್ನು ಸಮರ್ಥಿಸಲು ಕವಿ ಮತ್ತೆ ಮುಂದುವರೆಸಿದ ಸಾಲುಗಳು ಪದ್ಯವನ್ನು ನಾಟಕೀಯ ಅಂತ್ಯಕ್ಕೆ ಎಡೆಮಾಡುತ್ತದೆ. “ಮಾನವ ಜಾತಿ ತಾನೊಂದೇ ವಲಂ” ಎಂದಾ ಕವಿಯ ಮಾತು ನಮ್ಮೆದೆಯೊಳಗೆ ಇಳಿಯುವುದೇ ಇಲ್ಲ! ಇಲ್ಲ, ಇಲ್ಲ ನಾವು ಬದಲಾಗುವುದೇ ಇಲ್ಲ! ಈ ಸಾಲು ಪದ್ಯದ ಆಂತರಿಕ ಸತ್ವವನ್ನು ಘೋಷವಾಕ್ಯ ಮಾಡಿದ ಕಾರಣ ಮುಟ್ಟಬೇಕಾದ ಎತ್ತರ ಮುಟ್ಟದ ದೀಪಾವಳಿಯ ರಾಕೆಟ್ಟಿನಂತಾಗಿದೆ. ಬೆಳಕು ಬೆಳಕೆ ಆಗಿರುವುದಿಲ್ಲ; ಕತ್ತಲೆ ಕತ್ತಲೆಯೇ ಆಗಿರುವುದಿಲ್ಲ,; ಬೆಳಕಿನಲ್ಲಿ ಎಷ್ಟೊಂದು ಕತ್ತಲೆ…‌ ನಾವದನ್ನು ಗಮನಿಸುವುದೇ ಇಲ್ಲ! ಈ ಸಾಲುಗಳನ್ನು ಓದಿದ ಕೂಡಲೇ ಯಾರೋ ದಾರ್ಶನಿಕರ ನೆನಪಾದರೆ ತಪ್ಪೇನಿಲ್ಲ. ಈ ಕವಿತೆಯಲ್ಲಿ ಚಂಸು ದಾರ್ಶನಿಕ ಸಂಗತಿಗಳನ್ನೇ ಹೇಳಹೊರಟಿದ್ದಾರೆ. ಆದರೆ ಪದ್ಯದ ಕೊನೆ ಕತ್ತಲಿನಂಥ ದ್ವೇಷದಲ್ಲೂ ಪ್ರೀತಿಯ ಬೆಳಕು ಮಿಂಚುವುದಿಲ್ಲವೇ? ಅನ್ನುವಾಗ ಈ ಕವಿ ಹೇಳ ಹೊರಟ ದಾರ್ಶನಿಕ ಸತ್ಯಕ್ಕೆ ತಲೆ ಬಾಗಲೇ ಬೇಕಾಗುತ್ತದೆ. ವರ್ತಮಾನದ ಸಂಗತಿಗಳಿಗೂ ಕವಿಯನ್ನು ಬಾಧಿಸುತ್ತವೆ. ಆ ಅಂಥ ಸಂಗತಿಗಳು ಕವಿತೆಗಳಾದಾಗ ಅಂದರೆ ನಿತ್ಯದ ಬದುಕಿನಲ್ಲಿ ನಾವೆಲ್ಲ ಕೇಳುತ್ತಲೇ ಇರುವ ಬ್ರಷ್ಟಾಚಾರ, ಅತ್ಯಾಚಾರ, ಮಧ್ಯವರ್ತಿಗಳ ಕಾಟವನ್ನು ಈ ಕವಿ ಪ್ರಶ್ನಿಸಿ ಉತ್ತರಕ್ಕಾಗಿ ತಡುಕುತ್ತಾರೆ. ಸೀತೆಗೆ ಪರೀಕ್ಷೆಯ ಮೇಲೆ ಪರೀಕ್ಷೆ! ಕೊನೆಗೊಂದು ಶವಪರೀಕ್ಷೆ… ವರದಿಗಳೆಷ್ಟೋ ಅಷ್ಟೂ ರಾಮಾಯಣ! ಮನಿಷಾಳ ಹತ್ಯೆ ಕುರಿತಂತೆ ಏನೆಲ್ಲವನ್ನೂ ಓದಿದ ನಮಗೆ ಚಂಸು ಅವರ ಈ ಕವಿತೆ ರಾಮಾಯಣದ ಸೀತೆಯನ್ನು ಈ ಕಾಲದ ಮನಿಷಾಳಿಗೆ ಲಿಂಕ್ ಮಾಡುತ್ತಲೇ ನಿಲ್ಲದ ಈ ಅತ್ಯಾಚಾರಗಳ ಬಗ್ಗೆ ವ್ಯಥೆ ಪಡುತ್ತಾರೆ. ಬರ್ತೇನಂತ ಬಂದೇ ಬಿಟ್ಟಳು ಎಂಥ ಬಜಾರಿ ಹೆಣ್ಣಪ್ಪ! ಮಾಯಗಾತಿ ಮುತ್ತೇಬಿಟ್ಟಳು ಹೋರಿ ಮ್ಯಾಲೆ ಮಾರಿ ಕಣ್ಣಪ್ಪ! ರೈತ ಮತ್ತು ಭೂಮಿಯ ಮೇಲೆ ವ್ಯವಸ್ಥೆ ಮಾಡುತ್ತಲೇ ಇರುವ ಕಂಟಕಗಳನ್ನು ಮಾರಿಯಂತೆ ಚಿತ್ರಿಸುವ ಈ ಕವಿ ರಾಣೇಬೆನ್ನೂರು ಭಾಗದಲ್ಲಿ ಬಿಟಿ ಹತ್ತಿ ಬೀಜದಿಂದ ಆಗಿದ್ದ ಘಟನೆಯನ್ನು ಸ್ವಾರಸ್ಯವಾಗಿ ವಿಸ್ತರಿಸುತ್ತಲೇ ಒಟ್ಟೂ ಸಾಮಾಜಿಕ ಸನ್ನಿವೇಶವನ್ನು ಚಿತ್ರಿಸುತ್ತಾರೆ ಅಜ ಒಯ್ದು ಗಜ ಮಾಡುವಳು ರೂಪಾಂತರವೊ ಎಲ್ಲ ಅಜಗಜಾಂತರ! ಜೀವ ಸಂಕುಲದ ಸ್ವಭಾವಾ ತಿದ್ದುವಳು ಕುಲಾಂತರವೊ ಎಲ್ಲ ಕಲಸುಮೇಲೋಗರ! ಚಾನೆಲ್ಲಗೆ ಚಾಕ್ಲೇಟು ಪೇಪರ್ಗೆ ಬಿಸ್ಕೀಟು ಏರಿಕೊಂಡೆ ಸಾರೋಟು ಮಾಡ್ತಾಳೆ ಕಣ್ಕಟ್ಟು! ಇವಳೆ ಲೆಫ್ಟು ಇವಳೆ ರೈಟು ಇವಳೇ ಫ್ರಂಟು ಚುಂಬಿಸಿ ರಂಬಿಸಿ ಎಗರಿಸಿ ಗಂಟು…. ಸದ್ಯ ಭೂ ಸುಧಾರಣೆ ಕಾಯಿದೆ ಮತ್ತು ಎಪಿಎಂಸಿ ಕುರಿತು ಚರ್ಚೆಗಳು ನಡೆದಿರುವ ಹೊತ್ತಲ್ಲಿ ಚಂಸು ಹೇಗೆ ಅಧಿಕಾರ ಪಿಪಾಸು ವ್ಯವಸ್ಥೆ ಬೇಸಾಯಗಾರನ ಬೆನ್ನು ಸುಲಿಯುತ್ತಿದೆ ಎನ್ನುವುದನ್ನು ಸರಳವಾಗಿ ಹೇಳುತ್ತಲೇ ರೈತನ ಮುಂದಿರುವ ಭವಿಷ್ಯದ ಸವಾಲುಗಳನ್ನು ಪಟ್ಟಿ ಮಾಡುತ್ತಾರೆ. ಇದರ ಮುಂದುವರೆದ ಸಾಲುಗಳನ್ನು ಅವರ ಇನ್ನೊಂದು ಪದ್ಯದಲ್ಲಿ ಹೀಗೆ ಹೇಳುತ್ತಾರೆ; ಬದಲಾಗುವ ಕಾಯ್ದೆಗಳ ಮಧ್ಯೆ ನಿನಗೂ ಇದೆಯೆ? ಕೃತಜ್ಞತೆಗೊಂದಿಷ್ಟು ಸ್ಥಳ? ಚಂಸು ಅವರನ್ನು ಯಾಕೋ ಬೇಸಾಯದಷ್ಟೇ ಕಾಡುವ ಸಂಗತಿಗಳು ಎಂದರೆ ಕತ್ತಲು ಮತ್ತು ಬೆಳಕು. ಅವರ ಇನ್ನೊಂದು ಪದ್ಯ ಹೀಗೆ ಕೊನೆಯಾಗುತ್ತದೆ; ಒಳಗಿನ ಕತ್ತಲೆಯ ಕಳೆಯಲು ಬೆಳೆಸಲೇಬೇಕು ಆತ್ಮಸಾಕ್ಷಿಯೊಂದಿಗೆ ನಂಟು! ಇದನ್ನು ಕವಿಯಾಗಿ ಹೇಳುವುದು ಸುಲಭ. ಆದರೆ ಬದುಕು ಅಷ್ಟು ಸರಳ ಅಲ್ಲವಲ್ಲ. ನಮ್ಮನ್ನು ಮುತ್ತಿರುವ ಕತ್ತಲನ್ನು ತೊಡೆಯುವ ಅಧಿಕಾರಕ್ಕೆ ಆತ್ಮ ಸಾಕ್ಷಿಯೇ ಸತ್ತಿದೆಯಲ್ಲ, ಅದಕ್ಕೇನು ಮಾಡಬೇಕು? ಇದು ಎಡವೂ ಅಲ್ಲ! ಬಲವೂ ಅಲ್ಲ! ಎಡಬಲವೊಂದಾದ ಏಕತೆಯ ಹಾದಿ! ಭಾವೈಕ್ಯತೆಯ ಹಾದಿ! ಉಳಿದೆಲ್ಲವೂ ಆಗಲಿ ಬೂದಿ! ಇದು ಈ ಕವಿ ನೆಚ್ಚಿಕೊಂಡ ಮೆಚ್ಚಿಕೊಂಡ ಬದುಕಿನ ಹಾದಿ. ಹಾಗಾಗಿಯೇ ಗಾಂಧಿ, ಬಸವ, ಅಂಬೇಡ್ಕರರ ಮುಂದಿಟ್ಟು ಕೊಂಡ ಸ್ಪಷ್ಟ ಹಾದಿ. ಆದರೆ ಬದುಕು ಕವಿತೆಯಷ್ಟು ಸರಳ ಅಲ್ಲವಲ್ಲ! ಸುಮ್ಮನೆ ಕೂತಿದ್ದೇನೆ ಅಂಧಭಕ್ತಿಯ ಸುಳ್ಳಿನುರುಳಿಗೆ ಗೋಣನೊಡ್ಡಿ ವಿಶ್ವಗುರುವಿನ ಪಟಾಕಿ ಹಾರಿಸಿ ಕೂಗುತ್ತ, ತಿಸ್‌ಮದ್ದು ಬುಸ್ ಅಂದಷ್ಟಕ್ಕೆ ಉಬ್ಬಿ ಹಲ್ಕಿರಿಯುತ್ತ! ಅಡಿಗರ “ಶ್ರೀ ರಾಮ ನವಮಿಯ ದಿನ” ಕವಿತೆಯ ಅಣುಕು ಈ ಸಾಲುಗಳು. ಅಡಿಗರ ಈ ಕವಿತೆಯನ್ನು ನೆನೆಯದೇ ನಮ್ಮ ಯಾವುದೇ ಕಾವ್ಯ ಕುರಿತ ಸಂಕಿರಣಗಳು ನಡೆಯಲಾರವು. ಅದನ್ನು ಅರಿತ ಈ ಕವಿ ಅಣಕವಾಡಿನ ಮೂಲಕ ಮತ್ತೊಂದು ಮಜಲಿಗೆ ಒಯ್ಯುವುದು ಹೀಗೆ; ಷಟ್ಚಕ್ರ ರಾಕೆಟುಗಳೆಲ್ಲಕ್ಕೂ ಚಲನೆಯೆ ಮೂಲಾಧಾರ. ಸಹಸ್ರಾರಕ್ಕದೇ ದಾರಿದೀಪ ಹುತ್ತಗಟ್ಟಿದೆ ಚಿತ್ತ! ಗೆದ್ದಿಲು ಪರಿತ್ಯಕ್ತ ಜಾಗ? ಎದೆಬಗೆದುಕೊಳ್ಳದೆ ಕಾಣಬಹುದೇ ಪ್ರಜಾವತ್ಸಲ ಬಾಪೂರಾಮನ ಆ ಅಂಥ ರೂಪ? ಗಾಂಧಿಯನ್ನು ಕಾಣಬೇಕಿರುವ ರೀತಿಯನ್ನು ಈ ಕವಿತೆ ಬಗೆಯುವ ಬಗೆಯೇ ಸಶಕ್ತವಾಗಿದೆ ಮತ್ತು ವಿಶಿಷ್ಠವೂ ಆಗಿದೆ. “ಹಂಗೆ ಇಲ್ಲದ ಖಬರಿನೊಳಗ ಏನೊ ಗುನುಗಿದ್ಹಾಂಗ” ಎಂದು ಒಂದು ಕವಿತೆಯಲ್ಲಿ ತಮ್ಮ ಕನಸನ್ನು ತಾವೇ ವರ್ಣಿಸುವ ಈ ಕವಿಯ ಕನಸು ಖಬರಿಲ್ಲದವೇನೂ ಅಲ್ಲ. ಸಾಮಾಜಿಕ ಮೌಲ್ಯಗಳೇ ದಿವಾಳಿಯಾಗುತ್ತಿರುವ ಹೊತ್ತಲ್ಲಿ ತೀರ ಬೇಕೇ ಬೇಕಾದ ಆದರೆ ಮರೆತೇ ಹೋದ ಖಬರನ್ನು ಚಂಸು ಎತ್ತಿ ಹಿಡಿಯುತ್ತಾರೆ ಮತ್ತು ಆ ಕಾರಣಕ್ಕೇ ಹೆಚ್ಚು ಇಷ್ಟವಾಗುತ್ತಾರೆ. ಸ್ವಲ್ಪ ಹೊತ್ತು ಬಿಟ್ಟು ಗುಂಪು ಕರಗಿದ ಮೇಲೆ ಮತ್ತೆ ಅಲ್ಲಿಗೆ ಧಾವಿಸಿದೆ…. ಧ್ಯಾನಸ್ಥ ತಪಸ್ವಿಯಂತೆ ಅದು ಹಾಗೆ ಕೂತಿರುವುದನ್ನು ಕಂಡು ಅಚ್ಚರಿಗೊಂಡೆ! ಅದೇ ನನ್ನ ಕವಿತೆ ಎಂದು ಎತ್ತಿಕೊಂಡೆ; ಎದೆಗೊತ್ತಿಕೊಂಡೆ! ಇಂಥ ಬರವಣಿಗೆಯ ನಡುವೆಯೇ ಬೇಂದ್ರೆಯವರ           “ಕುಣಿಯೋಣು ಬಾರಾ” ಪದ್ಯಕ್ಕೂ ಚಂಸು ಅಣಕು ಮಾಡಬಲ್ಲರು; ಅವ್ನೌನು ಲಾಕ್ಡೌನು ಮುಗೀತು ಕೊರೊನಾ ಹೈರಾಣಾ ಸಾಕಾತು ಜುಮ್ಮಂತ ನುಗ್ಗಿ ಬಿಮ್ಮಂತ ಹಿಗ್ಗಿ ಕುಣಿಯೋಣಾ ಬಾರಾ ಕುಣಿಯೋಣಾ ಬಾರಾ! ಇನ್ನೂ ಸ್ವಾರಸ್ಯದ ಸಂಗತಿಯೆಂದರೆ ಲಾಕ್ಡೌನ್ ಕಾಲದ ಕವಿ ಈ ಚಂಸು. ಅದನ್ನು ಅತ್ಯಂತ ಸ್ವಾರಸ್ಯವಾಗಿ ಹಾಸ್ಯದಲ್ಲಿ ಹೇಳುತ್ತಲೇ ಆಳದಾಳದ ವಿಷಾದವನ್ನೂ ಗುರ್ತಿಸುವುದು ಇವರ ವಿಶೇಷ ಚಿತ್ರಕ ಶಕ್ತಿ. ಭಲ ಭಲಾ ಚಂಸು, ನಿಮ್ಮ ಪದ್ಯಗಳು ಓದುಗರದೇ ಆಗುವುದು ಈ ಸರಳ ರೀತಿಯಲ್ಲಿ ಹೇಳುತ್ತಲೇ ಸಂಕೀರ್ಣವೂ ಆಗುವ ತಿರುವುಗಳಿಂದಾಗಿ. ಮತ್ತು ಆ ತಿರುವುಗಳೇ ತಿವಿಯುವ ಆಯುಧಗಳಾಗಿ ಬದಲಾಗುವ ಕಾರಣಕ್ಕಾಗಿ. ಆದರೂ ಏನೆಲ್ಲ ಬಂಡಾಯದ ಮಾತುಗಳನ್ನು ಬರೆಯುತ್ತಿದ್ದ ನಿಮ್ಮ ಕವಿತೆಗಳು ಈಗ ಹತಾಶೆಯ ಮೂಸೆ ಸೇರಿ ನಿಜ ಬದುಕಿನ ಆವರ್ತನಗಳನ್ನು ಸರಳ ಸಾಲುಗಳಲ್ಲಿ ಕಂಡಿರಿಸುತ್ತಿರುವ ಪರಿಗೆ ದಿಗ್ಮೂಡಗೊಂಡಿದ್ದೇನೆ ಮತ್ತು ನಿಮ್ಮೊಳಗಿನ ಆ ಬಂಡಾಯ ಮತ್ತೆ ಪುಟಿದೆದ್ದು ಸದ್ಯದ ಕಾಯಿದೆ ಕಾನೂನುಗಳನ್ನು ಪ್ರಶ್ನಿಸುತ್ತಲೇ ಈ ನೆಲದ ಮಕ್ಕಳ ಹಕ್ಕನ್ನು ಎತ್ತಿ ಹಿಡಿಯಲಿ ಎನ್ನುವ ಆಶದೊಂದಿಗೆ ನಿಮ್ಮ ಕವಿತೆಗಳ ಟಿಪ್ಪಣಿಯನ್ನು ಕೊನೆಗೊಳಿಸುತ್ತಿದ್ದೇನೆ. ————————————————————————————————— ಚಂಸು ಪಾಟೀಲರ ಆಯ್ದ ಕವಿತೆಗಳು ೧. ಬದಲಾಗುತ್ತಲೆ ಇದೆ ಜಗತ್ತು ಅನುಕ್ಷಣ, ಅನುದಿನ, ವರ್ಷ ಯುಗಗಳಾಚೆಗೂ ಪುನರಾವರ್ತನೆಯ ಮಧ್ಯೆಯೂ ಪರಿವರ್ತನೆಯೆ ಜಗದ ನಿಯಮವೆಂಬಂತೆ ಬದಲಾಗುತ್ತಲೇ ಇದೆ ಜಗತ್ತು! ಇಲ್ಲ, ಇಲ್ಲ, ನಾವು ಮಾತ್ರ ಬದಲಾಗುವುದೇ ಇಲ್ಲ! ಮುಂಜಾನೆಯ ಇಬ್ಬನಿ ಕರಗಿತಲ್ಲ! ಮೊಗ್ಗು ಅರಳಿದೆಯಲ್ಲ; ಕೆಂಪನೆ ನೇಸರ ಬೆಳ್ಳಿತಟ್ಟೆಯಾಗಿ ಫಳಫಳಿಸುತಿಹನಲ್ಲ! ಚಿಲಿಪಿಲಿಗುಟ್ಟುತಿದ್ದ ಹಕ್ಕಿಗಳೆಲ್ಲೋ ದೂರಕೆ ಹಾರಿ ಹೋಗಿವೆಯಲ್ಲ…. ಬದಲಾಗುತ್ತಲೇ ಇದೆ ಜಗತ್ತು ಇಲ್ಲ, ಇಲ್ಲ, ನಾವು ಮಾತ್ರ ಬದಲಾಗುವುದೇ ಇಲ್ಲ! ಅದೇ ಭಾಷೆ, ಅದೇ ದೇಶ ಈ ಗಡಿಗಳಾಚೆ ನಾವು ಇಣುಕಿಯೂ ನೋಡುವುದಿಲ್ಲ! ಇಲ್ಲ, ಇಲ್ಲ ನಾವು ಬದಲಾಗುವುದೇ ಇಲ್ಲ! ವೈಶಾಖದಿ ಬಿತ್ತಿದ ಬಿತ್ತವಿದೋ ತೆನೆದೂಗಿ ನಿಂತಿದೆ! ಆಷಾಡದ ಸಮೀರನ ಶೀತಗಾಳಿ ಬಯಲಾಗಿ ಈಗೀಗ ಮತ್ತೆ ಮೂಡಲಸೋನೆ ಕೀಳುತಿದೆ! ಮಹಾನವಮಿಗೊಂದಿಷ್ಟು ಪಡುಗಾಳಿ ಬೀಸಿದರೆ ಹಾಯೆನಿಸುತ್ತದೆ…. ಬದಲಾಗುತ್ತಲೇ ಇದೆ ಜಗತ್ತು ಇಲ್ಲ, ಇಲ್ಲ ನಾವು ಮಾತ್ರ ಬದಲಾಗುವುದೇ ಇಲ್ಲ! ಅದೇ ಧರ್ಮ, ಅದೇ ಜಾತಿ ಈ ಲಕ್ಷ್ಮಣರೇಖೆಯಾಚೆ ನಾವು ಖಂಡಿತ ಕಾಲಿಡುವುದಿಲ್ಲ! ಇಲ್ಲ,.ಇಲ್ಲ

Read Post »

You cannot copy content of this page

Scroll to Top