ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಥಾಗುಚ್ಛ

ಯಾರು ಹೊಣೆ ?

ಕಥೆ ಯಾರು ಹೊಣೆ ? ಎಂ.ಆರ್.ಅನಸೂಯ ಅಮ್ಮಾ ,ಅಮ್ಮಾ’ ಎಂದು ಚಂದ್ರಮ್ಮ ಬಾಗಿಲು ತಟ್ಟುತ್ತಾ ಕೂಗಿದಂತಾಯಿತು . ಟಿ.ವಿ ನೋಡುತ್ತ ಕೂತಿದ್ದ ಸುಮಿತ್ರ  ಗಡಿಯಾರದ ಕಡೆ ನೋಡಿದಳು. ಆಗಲೇ ರಾತ್ರಿ ಒಂಭತ್ತು  ಗಂಟೆಯಾಗಿತ್ತು. ಈಗ್ಯಾಕೆ ಬಂದಳಪ್ಪಾ ಎಂದುಕೊಳ್ಳುತ್ತಾ ಸುಮಿತ್ರ ಬಾಗಿಲು ತೆಗೆದು “ಏನು ಚಂದ್ರಮ್ಮ ಇಷ್ಟೊತ್ನಲ್ಲಿ ಯಾಕೆ  ಬಂದೆ’ ಎಂದು ಬಾಗಿಲತ್ರನೇ ನಿಂತು ಕೇಳಿದಳು. “ಅಮ್ಮಾ, ನಡಿರಮ್ಮ ಒಳಗೆ ಸ್ವಲ್ಪ ಮಾತಾಡ್ಬೇಕು”ಎನ್ನುತ್ತ   ಚಂದ್ರಮ್ಮ ಒಳಗೆ ಬಂದು ಕುಳಿತಳು. ಸುಮಿತ್ರ ಸೋಫದ ಮೇಲೆ ಕುಳಿತು”ಏನ್ಸಮಾಚಾರ ಚಂದ್ರಮ್ಮ” ಎಂದರು “ನೋಡ್ರಮ್ಮ ನಮ್ಮ ಹುಡುಗಿ ಗೀತ ಎಂಥ ಹಲ್ಕಾ ಕೆಲಸ  ಮಾಡ್ಕಂಡು ಕುಂತವಳೆ. ಮೂರೂ ಬಿಟ್ಟವಳು ” ಎಂದು ಅಳಲು ಶುರು ಮಾಡಿದಾಗ “ಅದೇನು ಸರ್ಯಾಗಿ ಹೇಳು ಚಂದ್ರಮ್ಮ” “ಏನೇಳನ್ರಮ್ಮ ನಂ ಹುಡುಗಿ ಗೀತ ಬಸ್ರಾಗಿ ಕುಂತವಳೆ.  ಸರೀಕರೆದ್ರುಗೆ ತಲೆಯೆತ್ಕಂಡು ಓಡಾಡ್ದಂಗೆ ಮಾಡ್ಬಿಟ್ಲು. ಎಲ್ಲನ ಹೋಗಿ ಸತ್ರೆ ಸಾಕು ಅನ್ಸು ಬಿಟ್ಟೈತೆ ಏನ್ಮಾಡದೊ ಒಂದು ಗೊತ್ತಾಗಕಿಲ್ಲ”ಎಂದು ಅಳುತ್ತಿದ್ದಳು ಆಗ ಸುಮಿತ್ರಾ “ನಿನ್ನದೇ ತಪ್ಪುಬೆಂಗಳೂರಿಗೆ  ನೀನ್ಯಾಕೆ ಕಳಿಸ್ದೆ .ಇಲ್ಲೇ ಮನೆ ಕೆಲಸ ಸಿಕ್ತಿರಲಿಲ್ವೆ.ಯಾರಾದ್ರೂನು  ವಯಸ್ಸಿಗೆ ಬಂದಿರ ಹುಡುಗಿನ ಬೇರೆ ಊರಿಗೆ ಕಳಿಸ್ತಾರ ಈಗ ಅತ್ರೆ ಏನು ಬಂತು”ಎಂದು ಒರಟಾಗಿ ಹೇಳಿದಳು.  “ಇಲ್ಲೆ ಇರಂಗಿದ್ರೆ ನಾನ್ಯಾಕ್ರಮ್ಮ ಬೆಂಗಳೂರಿಗೆ ಕಳಿಸ್ತಿದ್ದೆ”  “ಇಲ್ಲಿರಕಾಗ್ದೆ ಇರೋ ಅಂಥಾದ್ದು ಏನಾಗಿತ್ತು” “ಏನು ಹೇಳನ್ರಮ್ಮ.ನನ್ನ ಹಣೆಬರಾನೇ  ಸರ್ಯಾಗಿಲ್ಲ. ನನ್ನ ಗಂಡ ಕುಡ್ದೂ ಕುಡ್ದೂ ಸತ್ತ. ಆ ನನ್ನ ಎರಡ್ನೆ ಮಗಾನು  ಅವರಪ್ಪನಂಗೆ ಕುಡಿಯ ಚಟಕ್ಕೆ ಬಿದ್ದು ಹಾಳಾದ.ದಿನಾ ಕುಡ್ಕಂಡು ಬಂದು ಆ ಹುಡುಗೀನ ಬಾಯಿಗೆ ಬಂದಂಗೆ ಬೈದು ಹೊಡಿಯಕ್ಕೆ ಹೋಗ್ತಿದ್ದ. ಈ ಹುಡುಗಿ ಹೆದರ್ಕಂಡು ಪಕ್ಕದ ಮನೆಗೆ ಓಡೋಗದು. ದಿನಾ ಈ ರಗಳೆ ನೋಡಕ್ಕೆ ಆಗ್ತಿರಲಿಲ್ಲ. ಬೆಂಗ್ಳೂರನಗಿರ ನನ್ನ ಎರಡ್ನೆ ಮಗಳು ಮನೆ ಕೆಲ್ಸ ಒಂದು ನೋಡಿದೀನಿ ಕಳ್ಸು ಅಂದ್ಲು. ಅದಕ್ಕೆ ಕಳಿಸ್ದೆ ಕಣ್ರಮ್ಮ.ಇನ್ನೇನು ಮಾಡ್ಲಿ ನೀವೇ ಹೇಳ್ರಮ್ಮ” ಎಂದಾಗ ಸುಮಿತ್ರಾಳಲ್ಲೂ ಉತ್ತರವಿರಲಿಲ್ಲ. ನಮ್ಮ ಘನ ಸರ್ಕಾರ ಘೋಷಿಸಿರುವ ಭೇಟಿ ಬಚಾವೋ ಯೋಜನೆ ನೆನಪಿಗೆ ಬಂತು. ಅ‌ಸಹಾಯಕಳಾದ ಚಂದ್ರಮ್ಮನಿಗೆ ಬೇರೆ ದಾರಿ ಇರಲಿಲ್ಲ ಅನಿಸಿತು. ಆಗ ಸುಮಿತ್ರಾಳು ಸಹಾ ಮೌನಕ್ಕೆ ಶರಣಾದಳು.ಸ್ವಲ್ಪ ಹೊತ್ತಿನ ನಂತರ ಚಂದ್ರಮ್ಮ ಮೆಲ್ಲಗೆ “ನನ್ನ ದೊಡ್ಮಗಳು ಡಾಕ್ಟರತ್ರ ಕರ್ಕೊಂಡು ಹೋಗ್ತವಳೆ. ಒಂದೆರಡು ಸಾವ್ರ ಕೊಡ್ರಮ್ಮ. ನನ್ನ ಮಾನ ಮರ್ಯಾದೆ ಹೋಗುತ್ತೆ. ಈಗ್ಲೆ ಕರ್ಕೊಂಡು ಹೋಗ್ಬೇಕು” ಎಂದು ಹೇಳಿ ಅತ್ತಳು.ಸುಮಿತ್ರ ದುಡ್ಡು ಕೊಟ್ಟ ತಕ್ಷಣವೇ “ಬರ್ತಿನಮ್ಮ ನಿಮ್ಮ ಉಪಕಾರ ಮರೆಯಂಗಿಲ್ಲ” ಎನ್ನುತ್ತಾ ಹೊರಟಳು ಚಂದ್ರಮ್ಮ ಸುಮಿತ್ರಾಳ ಮನೆಕೆಲಸಕ್ಕೆ ಸೇರಿ ಹದಿನೈದು ವರ್ಷಗಳ ಮೇಲಾಗಿತ್ತು.ಎಲ್ಲ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದ ಚಂದ್ರಮ್ಮ ಸುಮಿತ್ರನ ಮನಸ್ಸನ್ನುಗೆದ್ದಿದ್ದಳು ಯಾವ ಕೆಲಸವನ್ನು ಹೇಳಿದರೂ ಇಲ್ಲ ಎನ್ನದೆ ಮಾಡುವ ಚಂದ್ರಮ್ಮನ ಮಾತು ಕಡಿಮೆ.ಸುಮಿತ್ರಳು ಸಹ ಅವಳೆಲ್ಲ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದಳು. ಇವರ ಆಪ್ತತೆಯನ್ನು ಕಂಡ ಸುಮಿತ್ರನ ಮಗಳು “ನಿನ್ನ ಆಪ್ತ ಸಖಿ ಹೇಗಿದ್ದಾಳೆ” ಎಂದು ತಮಾಷೆ ಮಾಡುತ್ತಾಳೆ. ಇಂತಹ ಚಂದ್ರಮ್ಮನಿಗೆ ಐದು ಜನ ಮಕ್ಕಳಿದ್ದರು. ಮೂರುಹೆಣ್ಣು ಎರಡು ಗಂಡು. ಗಂಡ ಕುಡಿತದ ಚಟಕ್ಕೆ ಬಿದ್ದು ಆರೋಗ್ಯ ಕೆಡಿಸಿಕೊಂಡು ತೀರಿಕೊಂಡಿದ್ದ. ಹಿರಿಮಗ ಮದುವೆ ಆದ ಮೇಲೆ ಬೇರೆ ಮನೆ ಮಾಡಿದ್ದ. ದೊಡ್ಡ ಮಗಳನ್ನು ತಮ್ಮನಿಗೆ ಕೊಟ್ಟು ಮದುವೆ ಮಾಡಿದ್ದಳು. ಬಸ್ ಅಪಘಾತವೊಂದರಲ್ಲಿ ತಮ್ಮ ಸತ್ತ ಮೇಲೆ ಮಗಳು ಪುಟ್ಟ ಹೆಣ್ಣುಮಗುವನ್ನು ಕರೆದುಕೊಂಡು ತವರು ಮನೆ ಸೇರಿದ್ದಳು. ಕೂಲಿ ಮಾಡಿ ದುಡಿದು ತರುತ್ತಿದ್ದರಿಂದ ಯಾರಿಗೂ ಭಾರವಾಗಿರಲಿಲ್ಲ. ಚಂದ್ರಮ್ಮನ ಎರಡನೆ ಮಗನೂ ಸಹಾ ಅವರಪ್ಪನಂತೆ ಕುಡಿತಕ್ಕೆ ದಾಸನಾಗಿದ್ದ. ಅವನು ದುಡಿದದ್ದೆಲ್ಲ ಅವನ ಕುಡಿತಕ್ಕೇ ಸರಿ ಹೋಗುತ್ತಿತ್ತು. ಎರಡನೆ ಮಗಳು ಮತ್ತು ಅವಳ ಗಂಡ ಇಬ್ಬರೂ ಬೆಂಗಳೂರು ಸೇರಿದ್ದರು. ಇನ್ನು ಮೂರನೆ ಮಗಳು ಗೀತ ಹತ್ತನೆ ತರಗತಿಯ ತನಕ ಓದಿ ಫೇಲಾಗಿ ಶಾಲೆ ಬಿಟ್ಟಿದ್ದಳು. ಚಂದ್ರಮ್ಮಮೂರು ಮನೆಗಳ ಮನೆ ಕೆಲಸ ಮಾಡಿದರೆ, ಗೀತ ಎಲ್ಲೂ ಕೆಲಸಕ್ಕೆ ಹೋಗದೆ ಮನೆಯಲ್ಲಿದ್ದು ಅಡುಗೆ ಮಾಡ್ಕೊಂಡು ಅಕ್ಕನ ಮಗಳನ್ನ  ನೋಡಿಕೊಂಡಿದ್ದಳು.ಒಟ್ಟಾರೆ ಮನೆಯ ಹೆಣ್ಣುಮಕ್ಕಳೇ ಸಂಸಾರದ ಆಧಾರದ ಸ್ತಂಭವಾಗಿದ್ದರು. ಚಂದ್ರಮ್ಮನಿಗೆ ಹುಷಾರಿಲ್ಲದಾಗ ಮನೆ ಕೆಲಸ ಮಾಡಿ ಕೊಡುತ್ತಿದ್ದ ಗೀತ ಲಕ್ಷಣವಾಗಿದ್ದಳು.ಕುಡುಕನಾಗಿದ್ದ ಎರಡನೆ ಅಣ್ಣನ ಕಾಟ ತಡೆಯಲಾಗದೆ ಗೀತ ಬೆಂಗಳೂರಿನಲ್ಲಿದ್ದ ಅಕ್ಕನ ಮನೆಗೆ  ಬಂದು ಅವಳ ಮನೆ ಹತ್ತಿರವೇ ಇದ್ದ ಮನೆಯೊಂದರಲ್ಲಿ ಕೆಲಸಕ್ಕೆ ಸೇರಿದ್ದಳು ಗಂಡ ಹೆಂಡತಿ ಇಬ್ಬರೂ ಕೆಲಸಕ್ಕೆ ಹೋಗುತ್ತಿದ್ದರಿಂದ ಮನೆಯಲ್ಲಿದ್ದ ಮಗುವನ್ನು ನೋಡಿ ಕೊಳ್ಳ ಬೇಕಾಗಿತ್ತು. ಮನೆಯಲ್ಲಿದ್ದಂಥ ಮಗುವಿನ ಅಜ್ಜಿಗೆ ಸಹಾಯಕಿಯಾಗಿ ಇರಬೇಕಿತ್ತು. ಬೆಳಿಗ್ಗೆ ಎಂಟು ಗಂಟೆಗೆ ಹೋದರೆ ಸಂಜೆ ಎಂಟು ಗಂಟೆಗೆ ವಾಪಸಾಗುತ್ತಿದ್ದಳು ಊಟ ತಿಂಡಿ ಎಲ್ಲಾ ಅಲ್ಲೇ ಆಗುತ್ತಿದ್ದರಿಂದ ಅಕ್ಕನಿಗೂ ಸಹ ಭಾರವಾಗಿರಲಿಲ್ಲ. ಕೈಗೆ ನಾಲ್ಕು ಸಾವಿರ ಸಿಗುತ್ತಿತ್ತು. ಪ್ರತಿ ಭಾನುವಾರ ರಜೆ ಸಿಗುತ್ತಿತ್ತು. ಮನೆಯಲ್ಲಿನ ಇತರ ಕೆಲಸಗಳನ್ನು ಬೇರೆಯವರು ಮಾಡಿ ಕೊಡುತ್ತಿದ್ದರಿಂದ ಮಗು ನೋಡಿಕೊಳ್ಳುವ ಕೆಲಸ ಅಷ್ಟೇ. ಇಷ್ಟೇ ಆಗಿದ್ದರೆ ಚಂದ್ರಮ್ಮ ಇಷ್ಟೊತ್ನಲ್ಲಿ ಸುಮಿತ್ರನ ಮನೆಗೆ  ಬಂದು ಹೀಗೆ ಗೋಳಾಡುವ ಪ್ರಮೇಯವೇ ಇರುತ್ತಿರಲಿಲ್ಲ.ಗೀತಳ ಅಕ್ಕ ಗಾರ್ಮೆಂಟ್ ಕೆಲ್ಸಕ್ಕೆ ಹೋದ್ರೆ ಅವಳ ಗಂಡ ಹೋಟೆಲ್ ಕೆಲ್ಸಕ್ಕೆ ಹೋಗುತ್ತಿದ್ದ. ಅವನ ಜೊತೆ ಕೆಲಸ ಮಾಡುತ್ತಿದ್ದ ಒಬ್ಬ ಹುಡುಗ ಆಗಾಗ್ಗೆ ಮನೆಗೆ ಬಂದು ಹೋಗುತ್ತಿದ್ದನು ಅವನೊಡನೆ ಗೀತಳ ಸ್ನೇಹವು ಬೆಳೆದು ಅವರಿಬ್ಬರೂ  ಪ್ರೇಮಿಗಳಾಗುವ ಹಂತಕ್ಕೆ ಬಂದಿತ್ತು.ಅವಳ ಅಕ್ಕನಿಗೆ  ನಾವಿಬ್ಬರೂ ಮದುವೆಯಾಗುತ್ತೇವೆ ಎಂದು ಹೇಳಿದ್ದಳು  ಅವಳ ಅಕ್ಕ ಸ್ವಲ್ಪ ಸಲಿಗೆ ಬಿಟ್ಟಿದ್ದೇ ಈಗ ತಪ್ಪಾಗಿತ್ತು. ಪ್ರತಿ ಭಾನುವಾರ ಅವನ ಜತೆ ಸಿನಿಮಾ ಹೋಟೆಲ್ ಗೆ ಹೋಗಿ ಬರುತ್ತಿದ್ದಳು. ಅವಳ ಅಕ್ಕನ ಕಣ್ಣಿಗೆ ಗೀತಳ ಹೊಟ್ಟೆಯು ಸ್ವಲ್ಪ ದಪ್ಪಗಾದಂತೆ ಎನಿಸಿ ಅನುಮಾನದಿಂದ ಕೇಳಿದಾಗ ಗೀತ ನಿಜವನ್ನು ಬಾಯ್ಬಿಟ್ಟಳು.”ಏನೇ ಇದೆಲ್ಲಾ ಮದ್ವೆಗೆ ಮುಂಚೆನೆ” ಎಂದು ಕೇಳಿದರೆ “ನಾವಿಬ್ರು, ದೇವಸ್ಥಾನದಗೆ  ಮದ್ವೆ ಆಗಿದೀವಿ.”ಎಂದು ಹೇಳಿ ತೆಗೆದಿಟ್ಟಿದ್ದ ಕರಿಮಣಿ ಸರವನ್ನು ಹಾಕಿಕೊಂಡಳು.ಇದನ್ನು ಕೇಳಿದ ಅವಳಕ್ಕನ ಗಂಡ ಸಿಟ್ಟಾಗಿ “ನೀನು ಇಲ್ಲಿರಬೇಡ ಮೊದ್ಲು ಊರಿಗೆ ಹೊರಡು” ಎಂದು ಕೂಗಾಡಿದನು ಮಾರನೆ ದಿನವೇ ಅವಳ ಅಕ್ಕ ಗೀತ ಕೆಲಸ ಮಾಡುತ್ತಿದ್ದ ಮನೆಗೆ ಅವಳ  ಜೊತೆಗೆ ಹೋಗಿ ಅವರಲ್ಲೇ ಬಿಟ್ಟಿದ್ದ ಸಂಬಳದ ದುಡ್ಡು ಸುಮಾರು ನಲ್ವತ್ತು ಸಾವಿರದಷ್ಟಿದ್ದ ದುಡ್ಡು ಕೇಳಿ ತರಲು  ಹೋದಾಗ ಗೊತ್ತಾಯ್ತು ಆಗಲೇ ಐದು ಸಾವಿರವನ್ನು ಗೀತ  ಖರ್ಚು ಮಾಡಿದ್ದಳು. ಸ್ವಲ್ಪ ದಿನ ಊರಿಗೆ ಹೋಗಿ ಬರ್ತಳೆ. ನಮ್ಮಮ್ಮಂಗೆ ಹುಷಾರಿಲ್ಲ ಎಂದು ಮನೆಕೆಲಸದ ಯಜಮಾನಿಗೆ ಸುಳ್ಳು ಹೇಳಿ ಇಬ್ರು ಬಂದರು. ಗಂಡನ ಮಾತಿನಂತೆ ಅವಳ ಅಕ್ಕನೂ ಗೀತನ ಜತೆಗೆ ಊರಿಗೆ ಬಂದಿದ್ದಳು. ಚಂದ್ರಮ್ಮನಿಗೆ ಇರೋ ವಿಷ್ಯಾನೆಲ್ಲಾ ತಿಳಿಸಿ ಗಾರ್ಮೆಂಟ್ನವರು ರಜಾ ಕೊಡಲ್ಲ ಎಂದು ಹೇಳಿ ಹೊರಟೆ ಬಿಟ್ಟಿದ್ದಳು. ಬೆಳಿಗ್ಗೆ ಮನೆ ಕೆಲ್ಸಕ್ಕೆ ಬಂದ ಚಂದ್ರಮ್ಮ ಏನೂ ಮಾತಾಡದೆ ಮೌನವಾಗಿದ್ದಳು. ಸುಮಿತ್ರಾ ಟೀ ಕೊಟ್ಟು ಕೇಳಿದ್ರು”ಏನಂದ್ರು ಡಾಕ್ಟರ್”. ಅಬಾಷನ್ ಮಾಡಕ್ಕಾಗಲ್ಲವಂತೆ. ಆಗ್ಲೆ ನಾಕ್ ತಿಂಗಳು ತುಂಬೈತಂತೆ “ಎಂದಳು ಸೋತು ಸುಣ್ಣವಾದ ಧ್ವನಿಯಲ್ಲಿ  ನಾಲ್ಕು ತಿಂಗಳಾದ್ರೂ ನಿಮಗೆ ಅಷ್ಟೂ ಗೊತ್ತಾಗಲಿಲ್ವೆ ” ಸ್ವಲ್ಪ ಒರಟಾಗೇ ಕೇಳಿದಳು ಸುಮಿತ್ರ.”ಆಗೆಲ್ಲ ಎನೇನೊ ಹೇಳ್ಕಂಡು ಅವ್ರ ಅಕ್ಕನ್ನ ಏಮಾರಿಸಿ ಬಿಟ್ಟವಳೆ.ಮೂರೂ ಬಿಟ್ಟವಳು ಅವರಕ್ಕನಿಗೆ ಗೊತ್ತಾಗಿರದೆ ಈಗ. ಗೊತ್ತಾದ ತಕ್ಷಣವೇ ಇಲ್ಲಿಗೆ ಕರ್ಕೊಂಡು ಬಂದವಳೆ” ಅದರ ಬಗ್ಗೆ ಮಾತಾಡಕ್ಕೆ ಅವಳಿಗೆ ಇಷ್ಟವಿಲ್ಲವೆಂದರಿತ ಸುಮಿತ್ರಾನೂ ಸುಮ್ಮನಾದಳು. ಹೋಗುವಾಗ “ಒಂದು ವಾರ ಕೆಲ್ಸಕ್ಕೆ ಬರಲ್ಲಮ್ಮ.ನನ್ನ ದೊಡ್ಡ ಮಗಳ್ನ ಕಳಿಸ್ತಿನಿ”ಎಂದು ಹೇಳಿ ಹೋದಳು. ಮಧ್ಯಾಹ್ನ ಒಂದು ಗಂಟೆಗೆ ಚಂದ್ರಮ್ಮನು ಅವಳ ಎರಡನೆ ಮಗಳು ಬಂದರು.ಅವಳ ಮಗಳು ತಾನು ತಂದಿದ್ದ ಲಗೇಜ್ ಬ್ಯಾಗಿನಿಂದ ಒಂದು ಕೆಂಪು ಪ್ಲಾಸ್ಟಿಕ್ ಕವರ್ ತೆಗೆದು ಅವರಮ್ಮನ ಕೈಗೆ ಕೊಟ್ಟಳು ಚಂದ್ರಮ್ಮಅದನ್ನು ಸುಮಿತ್ರಾ ಕಡೆ ಕೊಡುತ್ತಾ” ಇದ್ರಗೆ ಮುವತ್ತು ಸಾವಿರ ಐತ್ರಮ್ಮ.ನಾನು ಕೇಳಗಂಟ ಇದು ನಿಮ್ಮತ್ರನೇ ಇರಲಿ.ನನ್ ಮಗನ ಕಣ್ಣೀಗೇನಾರ ಬಿದ್ರೆ ಎಗರಿಸಬಿಡ್ತನೆ”ಎಂದಳು. ಆಗ ಸುಮಿತ್ರಾ “ಬೇಡಬೇಡ ಚಂದ್ರಮ್ಮ .ಬ್ಯಾಂಕ್ನಲ್ಲಿಡು”ಎಂದಾಗ ಅವಳ ಮಗಳು “ನಮ್ಮಮ್ಮನ ಹೆಸರಿನಗ ಐತಂತ ಅವ್ನಿಗೆ ಗೊತ್ತಾದರೆ ನಮ್ಮಮ್ಮನ ಪ್ರಾಣ ಹಿಂಡಿ ತಗಂಡು ಬಿಡ್ತನೆ. ಅದಕ್ಕೆ ಒಂದು ಹದಿನೈದು ದಿನ ಕಳೆದ ಮೇಲೆ ಗೀತನ ಅಕೌಂಟ್ ಗೆ ಹಾಕ್ಕಂತಳೆ ಅಲ್ಲಿತನಕ ನಿಮ್ಮತ್ರನೆ ಇರಲಿ” ಎಂದಾಗ ಸುಮಿತ್ರಾ ದುಡ್ಡನ್ನು ಎಣಿಸಿ ಕೊಂಡು “ಹದಿನೈದು ದಿನ ಆದ ಮೇಲೆ ತಗೊಂಡು ಹೋಗಿ ಬ್ಯಾಂಕಲ್ಲಿ ಇಡಬೇಕು” ಎಂದು ತಾಕೀತು ಮಾಡಿದರು.ನಂತರ ನೆನ್ನೆ ರಾತ್ರಿ ತಾನೆ ತಗೊಂಡಿದ್ದ ಎರಡು ಸಾವಿರ ವಾಪಸ್ ಕೊಟ್ಟರು.ಒಂದು ವಾರ ಕಳೆದ ಮೇಲೆ ಚಂದ್ರಮ್ಮ ಬಂದಳು. ನೋಡಿದರೆ ಅದೇ ಚಿಂತೆಯಲ್ಲಿ ಸೊರಗಿದಾಳೆ ಎನಿಸಿತು. ಕೆಲಸವೆಲ್ಲ ಮುಗಿಸಿದ ಮೇಲೆ ಸುಮಿತ್ರಾ”ಏನು ಆ ಹುಡುಗನ್ನ ಸುಮ್ನೆ ಬಿಟ್ಬಿಟ್ರಾ”ಎಂದು ಕೇಳಿದಳು.”ಅದೆಂಗರಮ್ಮ ಸುಮ್ತಿರಕಾಗುತ್ತೆ. ತಂಗಿ ಗಂಡ,ಚಂದ್ರಮ್ಮನ ಮಗಮತ್ತು ಅಳಿಯ ಎಲ್ಲ ಹೋಗಿ ಜೋರು ಮಾಡಿದರಂತೆ.”ಆಗ ನಾವಿಬ್ರೂ ಒಪ್ಪಿನೇ ಮದ್ವೆ ಆಗಿರೋದು.ದೇವಸ್ಥಾನದಲ್ಲಿ ಮದ್ವೆ ಮಾಡ್ಕಂಡಿದೀವಿ.ಈಗಲೇ ಮನೆ ಮಾಡಕ್ಕೆ ನನ್ನತ್ರ ದುಡ್ಡಿಲ್ಲ. ವರ್ಷ ಕಳೆದ್ಮೇಲೆ ನಾನೇ ಬಂದು ಕರ್ಕೊಂಡು ಹೋಗ್ತೀನಿ. ಈಗ ನನ್ನ ಹತ್ರ ಇರೋದು ಹತ್ತು ಸಾವಿರ ಅಷ್ಟೆ”ಎಂದು ಹೇಳಿ ದುಡ್ಡು ಕೊಟ್ಟು ಕಳಿಸಿದ್ದ. ನಮ್ಮ ಹುಡುಗಿ ಹಳ್ಳಕ್ಕೆ ಬಿದ್ದೈತೆ.ಇಂಥ ಪರಿಸ್ಥಿತಿಯಾಗೆ ಇನ್ನೇನು ಮಾಡಾದು ಅಂತ ಬಾಯ್ಮುಚ್ಚಿಕೊಂಡು ಬಂದವ್ರೆ.ಅವಳ ಹಣೆಬರನ ನಾವು ತಿದ್ದಕ್ಕಾಗುತ್ತೇನು. ಮಾಡಿದ್ದುಣ್ಣೋ ಮಹರಾಯ. ಉಪ್ಪುತಿಂದ ಮ್ಯಾಲೆ ನೀರು ಕುಡಿಬೇಕು ಚಂದ್ರಮ್ಮನ ತಂಗಿ ಗಂಡ ಬಂದು ಚಂದ್ರಮ್ಮನ ಎರಡ್ನೆ ಮಗನಿಗೆ “ಆ ಹುಡುಗಿ ಸುದ್ದಿಗೆ ಹೋಗ್ಬೇಡಪ್ಪ ಹುಷಾರ್ ಪ್ರಾಣಗೀಣ ಕಳ್ಕೊಂಡ್ರೆ ಏನ್ಮಾಡಾದು.ಆಗಬಾರದಾಗಿತ್ತು ಆಗೋಗೈತೆ. ಅವಳ ಹಣೆಬರ ಇದ್ದಂಗಾಗುತ್ತೆ. ನಮ್ಮ ಕೈ ಮೀರೈತೆ”ಅಂತ ಹೇಳಿ ಹೋದ. ನಮ್ಮ ಅಕ್ಕಪಕ್ಕದ ಮನೆ ಜನಗಳಿಗೆಲ್ಲ ಗೊತ್ತಾಗಿ ಬಿಟ್ಟೈತೆ. ಆಡ್ಕಂಡು ನಗೋವ್ರ ಮುಂದೆನೇ ಎಡವಿ ಬಿದ್ದಂಗಾಯ್ತು. ಜನಕ್ಕೆ ಆಡ್ಕಳ್ಳ ಕತೆ ಆಗೋಯ್ತು ನಮ್ಮನೆ ಬದುಕು.ನೆಂಟರೆಲ್ಲ ಆಡಿಕ್ಯಂಡು ನಗ್ತಾವರೆ.ನಮ್ಮತ್ರಯಾರೂ ಮಾತಾಡಲ್ಲ.ಎಲ್ಲಾದ್ರು ತಲೆ ಮರೆಸ್ಕಂಡು ಹೋಗಿ ನೇಣಾಕ್ಕಂಡು ಸಾಯಂಗಾಗೈತೆ ನಾನ್ ತಲೆಎತ್ಕಂಡ್  ಒಡಾಡಕ್ಕಾಗದಂಗೆ ಮಾಡ್ಬಿಟ್ಟಳು” ಅಳುತ್ತಾ ಕಣ್ಣೀರು ಹಾಕಿದಳು.ಮತ್ತೆ ಮತ್ತೆ ಅದೇ ವಿಶ್ಯಾ ಕೆದಕಿ ಕೇಳುತ್ತಾ ಬೇಜಾರು ಮಾಡೋದು ಬೇಡವೆಂದು  ಸುಮಿತ್ರಾ ಏನೂ ಕೇಳಲಿಕ್ಕೆ ಹೋಗಲಿಲ್ಲ. ಒಂದಿಪ್ಪತ್ತು ದಿನಗಳಾಗಿರಬಹುದು. ಒಂದು ದಿನ “ನಮ್ಮ ದೊಡ್ಮಗಳು  ನೆನ್ನೆ ಡಾಕ್ಟ್ರತ್ರಕ್ಕೆ ಗೀತನ್ನ  ಕರ್ಕೊಂಡು ಹೋಗಿದ್ದಳು. ಅವಳಿಗೆ ರಕ್ತ ಕಡಿಮೆ ಐತಂತ ಹೇಳವ್ರೆ”ಎಂದಳು. ಈಗ ಮಗಳ ಬಗ್ಗೆ ಸಿಟ್ಟಿಗಿಂತ ಮರುಕವೇ ಎದ್ದು ಕಾಣುತ್ತಿತ್ತು. ಎಷ್ಟೇ ಆಗಲಿ ಹೆತ್ತ ತಾಯಿ ಅಲ್ವೆ ! ಆ ಕ್ಷಣ ಚಂದ್ರಮ್ಮನ್ನ  ನೋಡಿದ ಸುಮಿತ್ರಳಿಗೆ ಅಯ್ಯೋ ಅನಿಸಿತು.ಆ ಕ್ಷಣದಲ್ಲಿ ಸುಮಿತ್ರಳಿಗೆ  ಟಿ.ವಿ.ನಲ್ಲಿ ನೋಡಿ ಕೇಳಿದ ಮರ್ಯಾದಾ ಹತ್ಯೆಗಳು ನೆನಪಿಗೆ ಬಂತು. ಚಂದ್ರಮ್ಮನ ತಾಯ್ತನವೇ ಗೆದ್ದಿತ್ತು.ತಂದೆತಾಯಿಗಳು ಹೆತ್ತ ಮಕ್ಕಳನ್ನೇ ಕೊಲ್ಲುವಷ್ಟು  ಕಟುಕರಾಗಲು ಹೇಗೆ ಸಾದ್ಯ ? ಮಕ್ಕಳ ಪ್ರೇಮ ಪ್ರಕರಣ  ತಮ್ಮ ಕೈ ಮೀರಿ ಬೆಳೆದಾಗ ಅದಕ್ಕೆ ಬೇರೆ ರೀತಿಯಲ್ಲಿಯೇ ಪರಿಹಾರಗಳನ್ನು ಹುಡುಕಬೇಕು. ಅದನ್ನು ಬಿಟ್ಟು ತಮ್ಮ ಹೆತ್ತ ಮಕ್ಕಳನ್ನೆ ಕೊಲ್ಲುವ ಮಟ್ಟಕ್ಕಿಳಿಯಬಾರದು.ಏನೂ ಮಾಡಲಾಗದಿದ್ದರೆ ಕಡೆ ಪಕ್ಷ ಸುಮ್ಮನೆ ಇದ್ದು ಬಿಡಬೇಕು ಚಂದ್ರಮ್ಮನ ಅಸಹಾಯಕ ಪರಿಸ್ಥಿತಿಗೆ ಯಾವ ರೀತಿಯ ಸಮಾಧಾನ  ಹೇಳಬೇಕೆಂದು ಸುಮಿತ್ರಳಿಗೆ ತೋಚಲಿಲ್ಲ. ಚಂದ್ರಮ್ಮನ ಸಂಸಾರ ನೆರೆಹೊರೆಯವರ ನಗು ಪಾಟ್ಲಿಗೆ  ಗುರಿಯಾಗಿ ಅವಳ ನೆಮ್ಮದಿಯನ್ನು ಕೆಡಿಸಿತ್ತು. ಅದೂ

ಯಾರು ಹೊಣೆ ? Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ರತ್ನ ರಾಯಮಲ್ಲ . ಬದಲಾಗುವ ಋತುಮಾನಗಳಲ್ಲಿ ನೀನೇ ನನ್ನ ವಸಂತನಿನಗಾಗಿ ಮನೆ-ಮಠಗಳನ್ನು ತೊರೆದ ನಾನೇ ನಿನ್ನ ಸಂತ ಶಶಿಗೂ ಬೆಳದಿಂಗಳನು ನೀಡಿರುವ ಚಂದ್ರಮುಖಿ ನೀನುಹೃದಯದಿ ನಿನಗಾಗಿ ಪಾರಿಜಾತ ಹೂ ನೆಟ್ಟ ಹೃದಯವಂತ ನೀನು ಇಲ್ಲದ ಕತ್ತಲೆ ವೈರಿಯಾಗಿ ಕಾಡುತ್ತಿದೆ ಅನುದಿನವೂನಿನಗಾಗಿ ಪ್ರೇಮದ ಕಂದೀಲು ಹಿಡಿದು ಕುಳಿತಿರುವ ಗುಣವಂತ ವಿರಹವನ್ನೇ ಹಾಸಿ ಹೊದ್ದುಕೊಂಡು ಮಲಗಿರುವೆ ನೆನಪಿನಲ್ಲಿನಿನಗಾಗಿ ಸರಸದ ಪಲ್ಲಂಗ ಹಾಕಿರುವೆನು ಪ್ರೀತಿಯ ಸಿರಿವಂತ ನಿನಗೋಸ್ಕರ ಹಗಲನ್ನು ತಡೆದು ನಿಲ್ಲಿಸುತಿರುವನು ಈ ಮಲ್ಲಿಆಗಸದ ತಾರೆಗಳನ್ನು ನಿನ್ನ ಮುಡಿಗಾಗಿ ಹೆಣೆದ ಕಲಾವಂತ ****************************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಎ . ಹೇಮಗಂಗಾ ಕಲ್ಲುಮುಳ್ಳುಗಳ ಹಾದಿಯಲ್ಲಿ ನಡೆಯುತ್ತಲೇ ಇದ್ದೇನೆ ನಾನೇಕೆ ಹೀಗೆಕಷ್ಟ ಕಾರ್ಪಣ್ಯಗಳಲ್ಲಿ ಮುಳುಗುತ್ತಲೇ ಇದ್ದೇನೆ ನಾನೇಕೆ ಹೀಗೆ ಮೇಲೇರಬೇಕೆಂದರೂ ಕಾಲು ಹಿಡಿದು ಜಗ್ಗುವವರೇ ಹೆಚ್ಚುನಿತ್ಯ ಬೆನ್ನಿಗೆ ಇರಿಸಿಕೊಳ್ಳುತ್ತಲೇ ಇದ್ದೇನೆ ನಾನೇಕೆ ಹೀಗೆ ಮೋಡಿ ಮಾತುಗಳಿಗೆ ಮರುಳಾದರೂ ಎಚ್ಚೆತ್ತುಕೊಳ್ಳಲಿಲ್ಲಕುಹಕಿಗಳ ನೋಟಕೆ ಗುರಿಯಾಗುತ್ತಲೇ ಇದ್ದೇನೆ ನಾನೇಕೆ ಹೀಗೆ ಬೆಳ್ಳಗಿರುವುದೆಲ್ಲಾ ಹಾಲೆಂಬ ನಂಬಿಕೆ ಹೆಜ್ಜೆಹೆಜ್ಜೆಗೂ ಹುಸಿಯಾಗಿದೆವಂಚನೆಯ ಹಾಲಾಹಲವ ಕುಡಿಯುತ್ತಲೇ ಇದ್ದೇನೆ ನಾನೇಕೆ ಹೀಗೆ ಬೇಲಿಯೇ ಎದ್ದು ಹೊಲ ಮೇಯುವ ಕಾಲ ಇದಲ್ಲವೇ ಹೇಮತಿದ್ದಲಾಗದ ನನ್ನ ನಾನು ಹಳಿಯುತ್ತಲೇ ಇದ್ದೇನೆ ನಾನೇಕೆ ಹೀಗೆ ************************

ಗಝಲ್ Read Post »

ಇತರೆ, ವಾರ್ಷಿಕ ವಿಶೇಷ

ಸಂಗಾತಿಯೊಡನೆ ನನ್ನ ಪಯಣ

ಸಂಗಾತಿಯ ಇಬ್ಬರು ಲೇಖಕರುಬರೆದ ಅನಿಸಿಕೆಗಳು ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಮಹತ್ವ ಪ್ರತ್ಯೇಕವಾಗಿ ಉಲ್ಲೇಖಿಸುವ ಅವಶ್ಯಕತೆಯೇ ಇಲ್ಲ . ಮೊದಲಿನಿಂದ ಪ್ರಸಾರ ಮಾಧ್ಯಮ ಎಂದರೆ ಪತ್ರಿಕೆ ಮತ್ತು ಆಕಾಶವಾಣಿ. ಈಗ ದೂರದರ್ಶನ ಹಾಗೂ ಅಂತರ್ಜಾಲಗಳು ಈ ಪರಿಧಿಗೆ ಸೇರಿವೆ.  ದಿನಪತ್ರಿಕೆ ಓದದೇ ಬೆಳಗು ಆರಂಭವಿಲ್ಲ  ಎಂಬಂಥ ಕಾಲ ಹೋಗಿ ಎಲ್ಲವನ್ನೂ ದೃಶ್ಯ ಮಾಧ್ಯಮಗಳಲ್ಲಿ ಕಂಡುಕೊಳ್ಳುವ ಈ ಯುಗದಲ್ಲಿ ಮುದ್ರಿತ ಓದಿನ ಪತ್ರಿಕೆ, ನಿಯತ ಕಾಲಿಕೆಗಳು ತಮ್ಮ ಮೊದಲಿನ ಜನಪ್ರಿಯತೆಯನ್ನು ಕಳೆದುಕೊಳ್ಳುತ್ತಿದೆ.  ಈ ಪ್ರಚಲಿತ ವಿದ್ಯಮಾನದಲ್ಲಿ ಸುದ್ದಿ ತಿಳಿಯಲು ದಿನಪತ್ರಿಕೆಯೇ ಬೇಕೆಂದೇನಿಲ್ಲ.  ಎಲ್ಲೋ ಕೆಲವರಿಗಷ್ಟೇ ಈ ವಿದ್ಯುನ್ಮಾನದ ಓದುವಿಕೆಗಿಂತ ಅಚ್ಚಾದ ಕಪ್ಪು ಬಿಳುಪಿನ ಸುದ್ದಿಗಳ ಮೇಲೆ ಮಮಕಾರ.  ಹೀಗಿರುವಾಗ ವೆಬ್ ಮ್ಯಾಗಜಿನ್ಗಳು ಪತ್ರಿಕೆಗಳು ಮುಂಚೂಣಿಗೆ ಬರುತ್ತಿರುವುದು ವಿಶಿಷ್ಟವೂ ಅಲ್ಲ ವಿಶೇಷವೂ ಅಲ್ಲ . “ಕಾಲಾಯ ತಸ್ಮೈ ನಮಃ”  ಎನ್ನುವ ಬದಲಾದ ಪ್ರಪಂಚ ದೆಡೆಗೆ ಸಹಜ ನಡೆ . ಸಂಗಾತಿ ಪತ್ರಿಕೆಯ ಆರಂಭದ ಸಂಪಾದಕೀಯದಲ್ಲಿ ಸಂಪಾದಕರಾದ ಶ್ರೀ ಮಧುಸೂದನ ರಂಗೇನಹಳ್ಳಿ ಅವರು ಹೇಳುವ ಈ ಮಾತುಗಳು ಸಕಾಲಿಕ ಹಾಗೂ ಸಂದರ್ಭೋಚಿತ .. “ಮೊದಲಿನ ಹಾಗೆ ಪುಸ್ತಕವೊಂದನ್ಮು ಕೈಲಿ ಹಿಡಿದು ಕೂತಲ್ಲೇ ಬೇರು ಬಿಟ್ಟು ಓದುವ ಪುರುಸೊತ್ತು ಯಾರಿಗೂ ಇಲ್ಲ. ಆದರೆ ತಮ್ಮ ಟ್ಯಾಬ್,  ಫೋನುಗಳ ಮೂಲಕ ಪ್ರಯಾಣ ಮಾಡುತ್ತಾ, ಮನೆ ಕೆಲಸ ಮಾಡುತ್ತಾ, ತಮ್ಮ ವೃತ್ತಿಯಲ್ಲಿ ತೊಡಗಿಸಿಕೊಂಡಿರುತ್ತಲೆ ಓದುವ ಅಭ್ಯಾಸಕ್ಕೆ ಜನ ಒಗ್ಗಿ ಹೋಗುತ್ತಿದ್ದಾರೆ.  ಜನರ ಇಂತಹ ಸಾಹಿತ್ಯ ಓದಿನ ಅಗತ್ಯಕ್ಕಾಗಿಯೇ ಸಂಗಾತಿ ಪತ್ರಿಕೆಯನ್ನು ರೂಪಿಸಲಾಗಿದೆ” ಹೀಗೆ ರೂಪು ತಳೆದ ಸಂಗಾತಿ ಪತ್ರಿಕೆಗೀಗ ಒಂದು ವರ್ಷ.  ಈ ಸಂತಸದ ಸಂದರ್ಭದಲ್ಲಿ ಪತ್ರಿಕೆ ನಡೆದುಬಂದಿರುವ ಹಾದಿಯನ್ನು ಓದುಗಳಾಗಿ ನಾನು ಗುರುತಿಸಿರುವುದು ಹೀಗೆ.  ಮೊದಲಿಗೆ ನೂರಾರು (ಅಥವಾ ಸಾವಿರ?) ಉದಯೋನ್ಮುಖ ಕವಿಗಳಿಗೆ ಲೇಖಕರಿಗೆ ಗಜಲ್ ಕಾರರಿಗೆ ವೇದಿಕೆ ಕಲ್ಪಿಸಿಕೊಟ್ಟಿದೆ.  ಸಂಗಾತಿಯಲ್ಲಿ ನಮ್ಮ ಕವಿತೆ ಬಂದಿದೆ ಎಂದು ಹೆಮ್ಮೆಯಿಂದ ಲಿಂಕ್ ಪ್ರದರ್ಶಿಸುವವರ ದಂಡೇ ಇದೆ ನನ್ನನ್ನು ಸೇರಿಸಿ.  ನಂತರ ಅಂಕಣ ಬರಹಗಳು . ಹಳೆ ಬೇರು ಹೊಸ ಚಿಗುರು ಎಂಬಂತೆ ಪಾರ್ವತಿ ಐತಾಳರಂತಹ ಹಿರಿಯ ಸಾಹಿತಿಗಳ ಬರಹದ ಸವಿ ಉಣಿಸಿದಂತೆ ಮತ್ತೆ ಹಲ ಕೆಲವರಿಗೆ ಪ್ರಥಮ ಬಾರಿ ಅಂಕಣ ಬರೆಯುವ ಅವಕಾಶವನ್ನು ಕಲ್ಪಿಸಿಕೊಟ್ಟಿದೆ . ಹೊಸ ತರಹದ  ಕಥೆ ಕವಿತೆಗಳ ಪ್ರಕಟಣೆ, ವಿಚಾರಪೂರ್ಣ ಲೇಖನಗಳಿಂದ ಪುಸ್ತಕ ಪರಿಚಯಗಳವರೆಗೆ ಪ್ರತಿಭಾನ್ವಿತರ ಪರಿಚಯ, ಸಂದರ್ಶನ ,ಸಂದರ್ಭಾನುಸಾರ ವಿಶೇಷ ಸಂಚಿಕೆಗಳು (ಅಂಬೇಡ್ಕರ್ ಗಾಂಧಿ ಜಯಂತಿ )ಇತ್ಯಾದಿ…… ಏನುಂಟು ಏನಿಲ್ಲ?  ಮೊಗೆದಷ್ಟು ಸಾಹಿತ್ಯದ ಸವಿ ಎಳನೀರು  ಉಣಿಸುವ ಶರಧಿ ನಮ್ಮ ಸಂಗಾತಿ ಪತ್ರಿಕೆ . ಇಲ್ಲಿನ ಅಂಕಣ ಬರಹಗಳ ವಿಶೇಷಗಳನ್ನು ಇಲ್ಲಿ ಹಂಚಿಕೊಳ್ಳ ಬಯಸುವೆ. ಕವಿತೆ ಕಾರ್ನರ್ _ಶ್ರೀ  ಮಧುಸೂಧನ ರಂಗೇನಹಳ್ಳಿ ಎಲ್ಲಕ್ಕಿಂತ ಹೆಚ್ದು ಕಾದು ಕುಳಿತು ಓದುವ ಈ ಕವಿತೆಯ ಅಡ್ಡಾ ನನಗೆ ತುಂಬಾ ಇಷ್ಟದ್ದು.  ಶ್ರೀ ಮಧುಸೂಧನ ಅವರ ವಿಶಿಷ್ಟ ಕವನಗಳ ರಸಾಸ್ವಾದನೆಯ ಅವಕಾಶ ಕಲ್ಪಿಸುವ ಕವಿತೆ ಕಾರ್ನರ್ ನನ್ನಂತೆ ಇನ್ನಷ್ಟು ಅವರ ಅಭಿಮಾನಿಗಳ ಮೆಚ್ಚಿನ ಮೂಲೆ . ಹೊತ್ತಾರೆ  _  ಅಮೆರಿಕದ ಇಂಜಿನಿಯರ್ ಅಶ್ವತ್ಥ್ ಅವರ ಅಂಕಣ ನನಗೆ ನೆನಪಿರುವಂತೆ  ಸಂಗಾತಿಯಲ್ಲಿ ಮೊಟ್ಟ ಮೊದಲ ಅಂಕಣ ಹೊತ್ತಾರೆ . ಹೆಸರಲ್ಲೇ ಒಂಥರಾ ಸೆಳೆತವಿದ್ದ ಈ ಅಂಕಣದಲ್ಲಿ ಲೇಖಕರು ತಮ್ಮ ಬಾಲ್ಯದ ನೆನಪುಗಳ ಖಜಾನೆಯನ್ನೇ ಮೊಗೆಮೊಗೆದು ಸುರಿದು ಬಿಟ್ಟಿದ್ದಾರೆ.  ಹೆಚ್ಚಿನ ಅಂಶಗಳ ಸಾಮ್ಯವಿದ್ದ ವಿಷಯಗಳಿಂದ ಅಪ್ಯಾಯವೆನಿಸಿದ ನಮ್ಮದೇ ಅನುಭವಗಳ ನೆನಪಿನೂರಿಗೇ ಹೋಗಿ ಬಂದಂತೆ ಆಗಿತ್ತು . ಚೆಂದದ ಅಂಕಣದಿಂದ ಸಂಗಾತಿ ಅಂಕಣ ಬರಹಗಳ ಯಾನದ ಮುನ್ನುಡಿಯಾದ ಹೊತ್ತಾರೆ ತುಂಬಾ ಆತ್ಮೀಯವಾಗಿತ್ತು ಎಂದರೆ ಅತಿಶಯೋಕ್ತಿ ಏನಲ್ಲ . ಶಿವಮೊಗ್ಗ ಜಿಲ್ಲೆಯ ಚಳವಳಿಗಳು ಡಾಕ್ಟರ್ ಸಣ್ಣರಾಮ ಈ ಅಂಕಣವೂ ತುಂಬಾ ಮಾಹಿತಿಪೂರ್ಣ ಹಾಗೂ ವಿಚಾರ ಪ್ರಚೋದಕವಾಗಿದ್ದು ಅನೇಕ ಕುತೂಹಲಕಾರಿ ಮಾಹಿತಿಗಳನ್ನು ತೆರೆದಿಟ್ಟಿತ್ತು ದಿಕ್ಸೂಚಿ _  ಜಯಶ್ರೀ ಅಬ್ಬಿಗೇರಿ ವ್ಯಕ್ತಿಯ ವ್ಯಕ್ತಿತ್ವದ ಮೇಲೆ ಬೆಳಕು ಚೆಲ್ಲುವಂತಹ ವಿಚಾರಪೂರ್ಣ ಲೇಖನಗಳ ಮಾಲೆ.  ಹೆಸರಿಗೆ ತಕ್ಕಂತೆ ದಿಕ್ಸೂಚಿಯೇ ಸರಿ ವ್ಯಕ್ತಿತ್ವ ವಿಕಸನದ ಒಂದೊಂದೇ ಅಂಶಗಳನ್ನು ಸುಲಭ ಸರಳ ಭಾಷೆಯಲ್ಲಿ ಮನಸ್ಸಿಗೆ ಮುಟ್ಟುವಂತೆ ವಿವರಿಸುವ ಈ ಅಂಕಣದಿಂದ ತುಂಬಾ ಅನುಕೂಲ ಪಡೆದುಕೊಂಡೆ ನಾನಂತೂ.  ತುಂಬಾ ಇಷ್ಟವಾದ ಕೆಲ ಮಾಲಿಕೆಗಳು “ಆಗದು ಎಂದು ಹೇಳಲು ಕಲಿಯಿರಿ ಕಲಿಸಿರಿ”,  “ಸೋಲಿನ ಸುಳಿಯಲ್ಲಿ ಗೆಲುವಿನ ಹಾದಿ ಇದೆ” , “ತೊಂದರೆ ಕೊಡಬೇಡಿ ಎಂದು ಹೇಳಿಬಿಡಿ” ಎಲ್ಲಾ ಎಷ್ಟೋ ಬಾರಿ ಕೇಳಿದ ವಿಷಯಗಳೇ ಆದರೂ ಇಲ್ಲಿ ಓದುವಾಗ’  “ಹೌದಲ್ವಾ ಇಷ್ಟು ಸುಲಭವಾಗಿ ಮಾಡುವಂಥದ್ದನ್ನು ನಾವೇಕೆ ಪಾಲಿಸಲ್ಲ” ಅನ್ನಿಸುತ್ತೆ. ಎಲ್ಲೋ ನನ್ನ ಹಾಗೆ ಯೋಚಿಸುವವರೂ ಇದಾರಲ್ಲ ಆದರೆ ಮಾಡಬಹುದು ತಪ್ಪಲ್ಲ ಅನ್ನುವ   ಭಾವವನ್ನು ತರುತ್ತೆ. ಸಂಗಾತಿ ಓದುಗರ ಮನ ಸೆಳೆದಿರುವ ಮಾಲಿಕೆಯಿದು.  ಸಂಪ್ರೋಕ್ಷಣ _  ಅಂಜನಾ ಹೆಗಡೆ ಸುಂದರ ಭಾವಗಳನ್ನು ಅಂಕಣದ ಚೌಕಟ್ಟಿಗೆ ಹಿಡಿಸುವಂತೆ ಬಂಧಿಸಿ ಚೆಲುವಿನ ಚಿತ್ತಾರದ ರಂಗವಲ್ಲಿ ಹಾಕಿ ಮನ ಮುದಗೊಳಿಸುವ ಭಾವ ಪುಳಕದ ಸಿಂಚನದ ಸಂಪ್ರೋಕ್ಷಣ ಮಾಡಿಸುವುದು ಅಂಜನಾ ಹೆಗಡೆಯವರ ಈ ಅಂಕಣ . ಸಂಗಾತಿಗಾಗಿಯೇ ಮೊದಲ ಬಾರಿ ಅಂಕಣ ಬರೆದ ವಿಶೇಷತೆ ಇವರದು .ಸಂಗಾತಿಯ ಕೊಡುಗೆ ಎಂದರೆ ತಪ್ಪಾಗಲಾರದು.  ಬಣ್ಣದ ಕನಸುಗಳ ಮೋಹಕ ಲೋಕ ತೆರೆದಿಡುವ ಇವರು ಬಣ್ಣಗಳೇ ಇರದಿದ್ದರೆ ಲೋಕ ಹೇಗಿರುತ್ತಿತ್ತು ಎಂಬ ಯೋಚನೆಗೆ ಪ್ರಚೋದಿಸುತ್ತಾರೆ ಇವರ ಬರಹಗಳ ಸುಂದರ ಲೋಕದಲ್ಲಿ ವಿಹರಿಸುವುದೇ ಸಂಭ್ರಮದ ವಿಷಯ. ಸಂಗಾತಿಯ ಸಾನ್ನಿಧ್ಯದ ಹಿತ ಹೆಚ್ಚಿಸುವ ಸಂಪ್ರೋಕ್ಷಣ ಸಂಗಾತಿಯ ಆಕರ್ಷಣೆಗಳಲ್ಲೊಂದು ಮೂರನೇ ಆಯಾಮ _ ಶ್ರೀದೇವಿ ಕೆರೆಮನೆ ಈಗಾಗಲೇ ಸಾಕಷ್ಟು ಪುಸ್ತಕಗಳನ್ನು ಪ್ರಕಟಿಸಿ ಪ್ರಸಿದ್ಧ ಅಂಕಣ ಕರ್ತೆಯಾಗಿರುವ ಶ್ರೀದೇವಿ ಕೆರೆಮನೆಯವರ ಅಂಕಣ ಆರಂಭವಾಗಲಿದೆ ಎಂದಾಗ ಸ್ವಾಭಾವಿಕವಾಗಿಯೇ ನಿರೀಕ್ಷೆ ಹೆಚ್ಚಿತ್ತು . ಅದನ್ನು ಸುಳ್ಳು ಮಾಡದೆಯೇ ವಾರವಾರವೂ ಹೊಸ ಪುಸ್ತಕಗಳ ಸರಕು ತಂದು ನಮ್ಮ ಮುಂದೆ ಜೋಡಿಸಿಡುವ ಈ ಅಂಕಣ ಓದಿನ ಆಸಕ್ತಿಯ ಹರಿವಿಗೆ ದಿಶೆ ತೋರಿಸುತ್ತಿದೆ ಎಂದರೆ ತಪ್ಪಾಗಲಾರದು ಕವಿತೆಗಳಿರಲಿ ಕಥೆ ಇರಲಿ ಇವರ ವಿಮರ್ಶೆಯ ನಿಕಷದಲ್ಲಿ ಮತ್ತಷ್ಟು ಹೊಳೆಯುವ ಪರಿ ಓದಿಯೇ ಆಸ್ವಾದಿಸಬೇಕು ಇವರ ಬರಹದಿಂದ ಪ್ರೇರೇಪಿತಳಾಗಿ ಕೆಲ ಪುಸ್ತಕಗಳನ್ನು ಕೊಂಡು ಓದಿದ್ದೇನೆ . ಬೌದ್ಧಿಕ ಹಸಿವಿಗೆ ಬುತ್ತಿ ಒದಗಿಸುವ ಅಂಕಣ ಇದು ಅನುವಾದಿತ ಕೃತಿ ಪ್ರಪಂಚ ಪ್ರವೇಶ ಪಾರ್ವತಿ ಐತಾಳ ಬೇರೆ ಭಾಷೆಗಳಿಂದ ಕನ್ನಡಕ್ಕೆ ಅನುವಾದಗೊಂಡ ಪುಸ್ತಕಗಳ ಪರಿಚಯ ಮಾಡಿಸುವ ಅಂಕಣ.  ಉತ್ತಮ ಅನುವಾದಿತ ಹಾಗೂ ಓದಲೇ ಬೇಕಾದ ಕೃತಿಗಳನ್ನು ಸಂಗಾತಿಯ ಓದುಗರ ಗಮನಕ್ಕೆ ತರುವ ಈ ಅಂಕಣಕಾರ್ತಿ ನಿಜಕ್ಕೂ ಅಭಿನಂದನಾರ್ಹರು . ಶ್ರೇಷ್ಠ ಲೇಖಕಿ ಹಾಗೂ ಅನುವಾದಕಿಯಾದ ಇವರಿಂದ ಮತ್ತಷ್ಟು ಕೃತಿಗಳು ಸಂಗಾತಿಯ ಓದುಗರಿಗೆ ದಕ್ಕಲಿ ಎಂಬ ಅಭಿಲಾಷೆ ಹೊಸದನಿ ಹೊಸ ಬನಿ _ ಡಿ ಎಸ್ ರಾಮಸ್ವಾಮಿ ಹೆಸರಾಂತ ಕವಿಗಳು ಲೇಖಕರು ಆಗಿರುವ ನಮ್ಮ ಜೀವ ವಿಮಾ ಕುಟುಂಬದವರೇ ಆದ ಶ್ರೀ ಡಿ ಎಸ್ ರಾಮಸ್ವಾಮಿಯವರು ಬರೆಯುವ ಈ ಪುಸ್ತಕ ವಿಮರ್ಶೆಯ ಅಂಕಣ ತುಂಬಾ ಸ್ವಾರಸ್ಯಕರ . ಹಾಗೂ ಅವರ ವಿಮರ್ಶೆಯ ಹೊಳಹುಗಳನ್ನು ಅವಲಂಬಿಸಿ ನಡೆದರೆ ಹೊಸ ಬರಹಗಾರರಿಗಂತೂ ಉತ್ತಮ ಮಾರ್ಗದರ್ಶನ .ಉದಯೋನ್ಮುಖ ಕವಿ ಲೇಖಕರ ಪುಸ್ತಕ ಪರಿಚಯ ಮಾಡಿಕೊಡುವ ಈ ಅಂಕಣವಂತೂ ತಪ್ಪದೇ ಓದಿಸಿಕೊಂಡು ಹೋಗುವ ಗುಣ ಹೊಂದಿದೆ . ಮುಂದೊಂದು ದಿನ ನನ್ನ ಕವನ ಸಂಕಲನವೂ ಈ ಅಂಕಣದಲ್ಲಿ ವಿಮರ್ಶೆಯಾಗುವ ಪುಣ್ಯ ಪಡೆಯಲಿ ಎಂಬ ದೂ(ದು)ರಾಸೆಯೂ ಇದೆ . ಕಬ್ಬಿಗರ ಅಬ್ಬಿ_  ಮಹಾದೇವ ಕಾನತ್ತಿಲ ವೃತ್ತಿಯಲ್ಲಿ ವಿಜ್ಞಾನಿ ಪ್ರವೃತ್ತಿಯಲ್ಲಿ ಸಾಹಿತ್ಯ ಸಂಗೀತದ ಅಭಿಮಾನಿಯಾಗಿ ಮೆಟೀರಿಯಲ್ ಸೈನ್ಸ್ ನ ತತ್ವಗಳೊಂದಿಗೆ ರಸಾನುಭೂತಿಯ ಸ್ವಾದವನ್ನು ಪ್ರತಿವಾರ ಉಣಬಡಿಸಿ ಕಬ್ಬಿಗರ ಅಬ್ಬಿಯಲ್ಲಿ ಮೀಯುವ ಅವಕಾಶ ಮಾಡಿಕೊಡುವ ಈ ಅಂಕಣ ನಾನು ತಪ್ಪದೆ ಓದುವ ಅಂಕಣಗಳಲ್ಲೊಂದು . ವಾಸ್ತವದ ವಿದ್ಯಮಾನಗಳೊಂದಿಗೆ ಕವಿಕಲ್ಪನೆಯ ಬೆಸುಗೆಯನ್ನು ಮಾಡಿ ಅದಕ್ಕೆ ತಕ್ಕ ಕಾವ್ಯ ಕವನ ಪರಿಚಯದೊಂದಿಗೆ ಹೊಸ ವಿಸ್ಮಯ ಪ್ರಪಂಚದ ಅನಾವರಣ ಮಾಡುವುದಷ್ಟೇ ಅಲ್ಲ ಕವಿ ಮನಸ್ಸುಗಳನ್ನು ಆ ವಿಶ್ವ ಪರ್ಯಟನೆಗೆ ಜೊತೆಯಲ್ಲೇ ಕೊಂಡೊಯ್ಯುವ ಅದ್ಭುತ ಅನನ್ಯ ಬರವಣಿಗೆ ಇವರದು.  ಕವಿತೆ ಬರೆಯಬೇಕೆನ್ನುವವರೆಲ್ಲಾ  ಓದಲೇಬೇಕಾದ ಲೇಖನ ಮಾಲೆ ಇದು. ಒಂದು ಲಕ್ಷ ಓದುಗರನ್ನು ತಲುಪಿರುವ ಸಂಗಾತಿಯನ್ನು ಮತ್ತಷ್ಟು ಜನರಿಗೆ ತಲುಪಿಸುವ ಕಾರ್ಯ ನಡೆಯಬೇಕು. ಸಂಗಾತಿಯ ಪೋಸ್ಟ್ಗಳಿಗೆ  ಕಾಮೆಂಟ್ಸ್ ಮಾಡುವರು ಇನ್ನಷ್ಟಿ ಹೆಚ್ಚಾಗಬೇಕು .ತಮ್ಮ ತಮ್ಮ ಸಾಮಾಜಿಕ ಜಾಲತಾಣದ ವರ್ಗಗಳಲ್ಲಿ ಸಂಗಾತಿಯನ್ನು ಹೆಚ್ಚೆಚ್ಚು ಪರಿಚಯಿಸಿ ಎಂಬುದು ಓದುಗಳಾಗಿ ನನ್ನ ಕಳಕಳಿಯ ಮನವಿ. ಇನ್ನು ಪತ್ರಿಕೆ ಹೆಚ್ಚು ಜನರನ್ನು ಮುಟ್ಟಬೇಕಾದರೆ ಇನ್ನಷ್ಟು ವೈವಿಧ್ಯಮಯ ಸಾಹಿತ್ಯ ಪ್ರಕಾರಗಳ ಅಂದರೆ ಕಥೆಗಳು ಕಾದಂಬರಿಗಳು ಥೀಮ್ ಬರಹ ಕವಿತೆಗಳು ಸ್ಪರ್ಧೆಗಳು ಆಯೋಜಿಸಬಹುದು ಎಂದು ನನ್ನ ವೈಯಕ್ತಿಕ ಅಭಿಪ್ರಾಯ.  ಓದುಗರ ಒಳ್ಳೆಯ ಕಾಮೆಂಟ್ಗಳನ್ನು ಪ್ರಕಟಿಸಬಹುದು . ಕುವೆಂಪು ಅವರು ಒಂದೆಡೆ ಹೇಳುತ್ತಾರೆ “ಪತ್ರಿಕೋದ್ಯಮ ಉದ್ಯೋಗದ ಅಥವಾ ಲಾಭದ ಮಟ್ಟಕ್ಕಿಳಿದು ‘ಪತ್ರಿಕೋದ್ಯೋಗಿ’ಯಾಗದಿರುವುದೊಂದು ಶುಭ ಚಿಹ್ನೆ.. ಉದ್ಯೋಗದ ಅಥವಾ ಲಾಭದ ಯೋಚನೆ ಸುಳಿಯಿತೆಂದರೆ ಶಾಸ್ತ್ರೀಯವಾಗಿ ನಿಷ್ಪಕ್ಷಪಾತವಾಗಿ ಉದ್ಯಮವನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ” (ಕುವೆಂಪು _ ಲೇಖನ ಪತ್ರಿಕಾ ಮನೋಧರ್ಮ). ಈ ಮಾತನ್ನು ಪುಷ್ಟೀಕರಿಸುವಂತಹ ಕಾರ್ಯ ಸಂಗಾತಿಯದು.  ಸಾಹಿತ್ಯ ಬೆಳೆಸುವ ಹಾಗೂ ಕನ್ನಡ ಪರ ಸೇವೆಯೊಂದನ್ನೇ ದೃಷ್ಟಿಯಲ್ಲಿ ಇಟ್ಟುಕೊಂಡಿರುವ ನಿಸ್ವಾರ್ಥ ಮನೋಭಾವದ ಸಂಗಾತಿಗೆ ಮೊದಲ ವರ್ಷದ ಹುಟ್ಟುಹಬ್ಬಕ್ಕೆ ಹಾರ್ದಿಕ ಅಭಿನಂದನೆಗಳು  . ಸಂಗಾತಿಯ ಸಾಹಿತ್ಯ ಸಾಂಗತ್ಯ ಕನ್ನಡಿಗರೆಲ್ಲರಿಗೂ ಹೆಚ್ಚಾಗಲಿ, ಎಲ್ಲರ ಹೃದಯ ಮುಟ್ಟಲಿ . ಪತ್ರಿಕೆಯ ಪರಿಧಿ ಇನ್ನಷ್ಟು ವಿಸ್ತಾರಗೊಳ್ಳಲಿ ಮೇರು ಮುಟ್ಟಲಿ ಎಂಬ ಆಶಯ .  ಈ ರಥದ ಸಾರಥಿಯಾಗಿರುವ ಶ್ರೀ  ಮಧುಸೂದನ್ ಅವರಿಗೆ ಹೃದಯಾಂತರಾಳದ ವಂದನೆ ಮತ್ತು ಅಭಿನಂದನೆಗಳು.                         ಸಂಗಾತಿಯ ಆಭಿಮಾನಿ ಓದುಗಳು                              ಸುಜಾತಾ ರವೀಶ್ .                                 ಸಂಗಾತಿ ಎಂಬ ಪದವು ಸಾಂಗತ್ಯದಿಂದ ಬಂದಿತೆಂದು ಕಾಣುತ್ತದೆ.  ಸ್ನೇಹಕ್ಕೂ ಸಾಂಗತ್ಯಕ್ಕೂ ತುಂಬಾ ವ್ಯತ್ಯಾಸವಿದೆ. ಸ್ನೇಹದ ವ್ಯಾಪ್ತಿ ಚಿಕ್ಕದು. ಸಾಂಗತ್ಯದ್ದು ಹಾಗಲ್ಲ. ಅದರ ನಿಘಂಟುವಿನ ಅರ್ಥ ಹೊಂದಾಣಿಕೆ, ಸಾಮರಸ್ಯ ಎಂದು ಕಾಣುತ್ತದೆ. ಅಂದರೆ ಒಂದು ತರದ ಪರಸ್ಪರ ಗೌರವ, ಮರ್ಯಾದೆ ಕೊಟ್ಟು ತೊಗೊಳ್ಳುವುದು. ಅದು ಸಂಪಾದಕರ ಸಂದೇಶಗಳಲ್ಲಿ ಕಾಣುತ್ತದೆ. ಬರಹಗಾರರ ಬಗ್ಗೆ ಅವರು ತೋರುವ ಸೌಜನ್ಯವೇ ಸಂಗಾತಿಯ ಉಸಿರು. ನಾನು ಈ ಒಂದೆರಡು ತಿಂಗಳಿಂದ ಮಾತ್ರ ಸಂಗಾತಿಯ ಸಂಗಾತಿಯಾಗಿದ್ದರೂ, ನನ್ನ ಬಗ್ಗೆ ಪತ್ರಿಕೆಯವರು ತೋರಿದ ಆದರ ಮರೆಯಲಾರದ್ದು. ಅದೇ ಪತ್ರಿಕೆಯ ಜನಾನುರಾಗದ ಅಡಿಪಾಯವಾಗಿದೆ. ಮುಂದೆ ಪತ್ರಿಕೆಯ ಅಂತರ್ವಸ್ತು. ಅನೇಕ ಸಾಹಿತ್ಯದ ವಿಷಯಗಳನ್ನುಣ ಬಡಿಸುವ ಪತ್ರಿಕೆಯವರ ತವಕ ಪತ್ರಿಕೆಯನ್ನು ಸಾಹಿತ್ಯದ ಕಾಮನಬಿಲ್ಲಾಗಿಸಿದೆ ಎಂದರೆ ತಪ್ಪಗಲಾರದು. ನಿಜಕ್ಕೂ ಪತ್ರಿಕೆಯ ಮೊದಲನೆಯ ವಾರಿಷಿಕೋತ್ಸವ ಈ ತಿಂಗಳ ಇಪ್ಪತ್ತರಂದು ಅಂತ ನೋಡಿದಾಗ ನನಗಾದ ಆಶ್ಚರ್ಯ ಅಷ್ಟಿಷ್ಟಲ್ಲ. ಒಂದು ವರ್ಷದ ಈ ಕೂಸಿನಲ್ಲಿ ಅದೆಷ್ಟು ಪ್ರಬುದ್ಧತೆ ಕಾಣುತ್ತದೆ ಎನ್ನಿಸಿದ್ದಂತೂ ಹೌದು. ನಮ್ಮ ಹೈದರಾಬಾದಿನಲ್ಲಿ ಈ ವಾರ ಸುರಿದು ಜನಜೀವನವನ್ನು ಮತ್ತು ನಮ್ಮ ನೆಂಟರಿಷ್ಟರಿಗೆ ಕೊಟ್ಟ ಅನಾನುಕೂಲತೆಯಿಂದ ನನ್ನ ಲೇಖನ ಸ್ವಲ್ಪ ಮೊಟುಕುಗೊಳಿಸಬೇಕಾಗಿ ಬಂದಿದೆ ಬಿಟ್ಟರೆ ಇಲ್ಲಾಂದರೆ ಇನ್ನೂ ತುಂಬಾ ಬರೆಯುವುದಿತ್ತು. ಕರ್ನಾಟಕದಲ್ಲಿಯ ಕನ್ನಡ ಪತ್ರಿಕೆಗಳಲ್ಲಿ ಹೊರನಾಡ ಕನ್ನಡಿಗರ ಪರವಾಗಿ ನನ್ನದೊಂದು ವಿನಂತಿ ಇದೆ. ಹೊರನಾಡಲ್ಲಿದ್ದು ನಾವು ಕನ್ನಡಮ್ಮನ ಸೇವೆ ಮಾಡುತ್ತಿರುವವರು.

ಸಂಗಾತಿಯೊಡನೆ ನನ್ನ ಪಯಣ Read Post »

ಇತರೆ, ಮಕ್ಕಳ ವಿಭಾಗ

ಅಲಕ್ಷ್ಯಕ್ಕೊಳಗಾಗಿರುವ ಮಕ್ಕಳ ಸಾಹಿತ್ಯ

ಲೇಖನ ಅಲಕ್ಷ್ಯಕ್ಕೊಳಗಾಗಿರುವ ಮಕ್ಕಳ ಸಾಹಿತ್ಯ ವಿಜಯಶ್ರೀ ಹಾಲಾಡಿ ಕರ್ನಾಟಕದ ಸಾಹಿತ್ಯ ಜಗತ್ತಿನಲ್ಲಿ `ಮಕ್ಕಳ ಸಾಹಿತ್ಯ’ ಎಂಬೊಂದು ಪ್ರಕಾರ ಹೇಗಿದೆ ಎನ್ನುವ ಕಡೆಗೆ ಯೋಚನೆ ಹರಿಸಿದರೆ ಬಹಳ ಖೇದವೂ, ಆಶ್ಚರ್ಯವೂ ಉಂಟಾಗುತ್ತದೆ. ಖೇದ ಏಕೆಂದರೆ ಏಕಕಾಲದಲ್ಲಿ ನಮ್ಮ ವರ್ತಮಾನವೂ, ಭವಿಷ್ಯವೂ ಆಗಿರುವ ಮಕ್ಕಳಿಗಾಗಿ ಇರುವ ಸಾಹಿತ್ಯ ಅಲಕ್ಷ್ಯವಾಗಿರುವುದಕ್ಕೆ. ಆಶ್ಚರ್ಯವೇಕೆಂದರೆ ಇಂತಹ ತಿರುಳನ್ನೇ ನಿರ್ಲಕ್ಷಿಸಿ ಇಡೀ ಸಾಹಿತ್ಯಲೋಕ ನಿಶ್ಚಿಂತೆಯಿಂದ ಇದ್ದು ಬಿಟ್ಟಿರುವುದಕ್ಕೆ! ಸಾಹಿತ್ಯ ವಲಯದ ಹಲವರೂ, ಸಂಸ್ಥೆ-ಅಂಗಸಂಸ್ಥೆಗಳೂ, ಸ್ವತಃ ಬರಹಗಾರರೂ, ಓದುಗರು ಎಲ್ಲರೂ ಸೇರಿ ಪಕ್ಕಕ್ಕೆ ಎತ್ತಿಟ್ಟು ಮರೆತುಬಿಟ್ಟ ಒಂದು ಸೃಜನಶೀಲ ಮಾಧ್ಯಮವಿದು. ಆದರೆ ಈ ಸಾಹಿತ್ಯ ಪ್ರಕಾರವನ್ನು ಅಲಕ್ಷಿಸಿದರೆ ನಮ್ಮ ಬದುಕಿನ ಆಶಾವಾದವಾದ ಮಕ್ಕಳನ್ನು, ಅವರ ಕನಸುಗಳನ್ನು ತುಳಿದಂತೆ ಎನ್ನುವುದಂತೂ ಸತ್ಯ!  ಶಿಶುಸಾಹಿತ್ಯದ ಕುರಿತು ಚಿಂತಿಸುವಾಗ ಏಳುವ ಬಹುಮುಖ್ಯ ಪ್ರಶ್ನೆಗಳೆಂದರೆ ಮಕ್ಕಳ ಸಾಹಿತ್ಯ ಕಡಿಮೆಯಾಗುತ್ತಿದೆಯೇ? ಗುಣಮಟ್ಟದ ಮಕ್ಕಳ ಸಾಹಿತ್ಯ ಕಡಿಮೆಯಾಗುತ್ತಿದೆಯೆ? ಈ ಸಾಹಿತ್ಯವನ್ನು ಓದುವವರು ಕಡಿಮೆಯೆ ಅಥವಾ ಗಾಂಭೀರ್ಯದ ಹೆಸರಲ್ಲಿ ಮಕ್ಕಳ ಸಾಹಿತ್ಯವನ್ನು ಮೂಲೆಗುಂಪಾಗಿಸಲಾಗಿದೆಯೆ? ಇಷ್ಟಕ್ಕೂ `ಮಕ್ಕಳ ಸಾಹಿತ್ಯ’ ಎನ್ನುವುದಕ್ಕೆ ವ್ಯಾಖ್ಯೆ ಏನು? ಮುಂತಾದವು. ಇಂತಹ ಹತ್ತಾರು ಪ್ರಶ್ನೆಗಳನ್ನಿಟ್ಟುಕೊಂಡು ಯೋಚಿಸುತ್ತ ಹೊರಟರೆ ಕನಿಷ್ಟ ಉತ್ತರದ ಹಾದಿಗಾದರೂ ತಲುಪಿಕೊಳ್ಳಬಹುದು ಎಂಬ ಆಶಯ ನನ್ನದು.    `ಮಕ್ಕಳ ಸಾಹಿತ್ಯ’ ಎಂದರೆ ಪ್ರೌಢ ಬರಹಗಾರರು ಮಕ್ಕಳಿಗಾಗಿಯೇ ಬರೆದ ಸಾಹಿತ್ಯ. ನಮ್ಮ ಮಕ್ಕಳಿಗೆ ಏನನ್ನು ಕೊಡಬೇಕು ಎಂಬ ದೃಷ್ಟಿಯನ್ನಿಟ್ಟುಕೊಂಡು ಅವರಿಗೆ ಇಷ್ಟವಾಗುವಂತೆ ಹಿರಿಯರು ಬರೆಯುವ ಕವಿತೆ, ಕತೆ ಇನ್ನಿತರ ಗದ್ಯ ಪ್ರಕಾರವೇ ಮಕ್ಕಳ ಸಾಹಿತ್ಯ. ಹಾಗಾದರೆ ಮಕ್ಕಳೇ ಬರೆದ ರಚನೆಗಳಿವೆಯಲ್ಲ; ಅವು ಏನು ಎನ್ನುವುದಕ್ಕೆ ಉತ್ತರ – ಅದು `ಸಾಹಿತ್ಯ’. ಮಗುವೊಂದು ಬರೆದದ್ದು ಇತರ ಮಕ್ಕಳಿಗಾಗಿ ಬರೆದ ಸಾಹಿತ್ಯವಾಗಿರಬಹುದು ಅಥವಾ ಅಲ್ಲದೆಯೂ ಇರಬಹುದು. ಈ ವಿಷಯದ ಕುರಿತು ಈಗಾಗಲೇ ಚರ್ಚೆಗಳಾಗಿವೆ ಮತ್ತು ಸಂವಾದಗಳು ನಡೆಯುತ್ತಲೂ ಇವೆ. ಏನೇ ಆದರೂ `ಮಕ್ಕಳಿಗಾಗಿ ಹಿರಿಯರು ಬರೆದದ್ದು’ ಮತ್ತು `ಮಕ್ಕಳೇ ಬರೆದದ್ದು’ ಈ ಎರಡು ಬಗೆಯ ಬರಹಗಳನ್ನೂ ಪ್ರತ್ಯೇಕವಾಗಿ ಪರಿಗಣಿಸುವುದು ಒಳ್ಳೆಯದು.   ಮುಖ್ಯವಾಗಿ ನಮ್ಮ ವ್ಯವಸ್ಥೆಯಲ್ಲಿ ಮಕ್ಕಳು ಅಲಕ್ಷಿತರು. ಪ್ರಸ್ತುತ ದಿನಗಳಲ್ಲಿ ಅವರವರ ಒಂದೋ, ಎರಡೋ ಮಕ್ಕಳಿಗೆ ಜನರು ಬಹಳ ಪ್ರಾಮುಖ್ಯತೆ ಕೊಡುತ್ತಿದ್ದಾರೆ ಎಂದು ನಮಗನ್ನಿಸಿದರೂ ಹೀಗಿಲ್ಲದ ಪೋಷಕರೂ ಬಹು ಸಂಖ್ಯೆಯಲ್ಲಿದ್ದಾರೆ. ಅದಲ್ಲದೇ ಊಟ, ವಸತಿ, ಪ್ರೀತಿ ಎಲ್ಲದರಿಂದ ವಂಚಿತರಾಗಿ ಅಕ್ಷರಶಃ ತಬ್ಬಲಿಗಳಾದ ಮಕ್ಕಳ ಸಂಖ್ಯೆಯೂ ನಾವು ಗಾಬರಿಬೀಳುವ ಪ್ರಮಾಣದಲ್ಲಿದೆ! ಪ್ರಾಮುಖ್ಯತೆ ಕೊಡುತ್ತಿರುವ ಪಾಲಕರಾದರೂ ತಮ್ಮ ಮಕ್ಕಳ ಬೇಕು-ಬೇಡಗಳನ್ನು ಗಮನಿಸುತ್ತಾರೋ ಅಥವಾ ತಮ್ಮ ಇಷ್ಟ ಅನಿಷ್ಟಗಳನ್ನು ಮಕ್ಕಳ ಮೇಲೆ ಹೇರುತ್ತಿದ್ದಾರೋ ಎಂದು ಗಮನಿಸಿದರೆ ಎರಡನೆಯ ಅಂಶವೇ ಉತ್ತರವೆಂಬುದು ಕಣ್ಣಿಗೆ ರಾಚುತ್ತದೆ. ತಮ್ಮ ಆಸೆಯಂತೆ ತಮ್ಮ ಮಕ್ಕಳನ್ನು `ತಿದ್ದುವುದೇ’ ಹೆಚ್ಚಿನ `ಪ್ರಜ್ಞಾವಂತ’ರ ಕಾಳಜಿ! ಈ ಕಾಳಜಿಯಲ್ಲಿ ಮಕ್ಕಳ ವಿದ್ಯಾಭ್ಯಾಸ ಕೂಡ ಭವಿಷ್ಯದ ದೊಡ್ಡ ಹುದ್ದೆ, ದೊಡ್ಡ ಹಣದ ಮೇಲೆ ಅವಲಂಬಿತವಾಗಿದೆ ಎಂದಾಗ ಮಕ್ಕಳ ಹವ್ಯಾಸ, ಆಸಕ್ತಿಯ ಕುರಿತಾದ ಜಾಗ್ರತೆ ಬಹುತೇಕ ಶೂನ್ಯ! ತಮ್ಮ ಮಕ್ಕಳು ಅವರಿಷ್ಟದ ಸೃಜನಶೀಲ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲಿ; ಕತೆ, ಕವಿತೆ, ಕಾದಂಬರಿಗಳನ್ನು ಓದಲಿ ಎನ್ನುವವರು ಪ್ರಜ್ಞಾವಂತರಲ್ಲೂ ವಿರಳ. ಪರಿಸ್ಥಿತಿ ಹೀಗಿರುವಾಗ ಇನ್ನುಳಿದ ಮಂದಿ ಇಂಥವರ ಅನುಕರಣೆಯನ್ನು ಮಾತ್ರ ಮಾಡುವುದು ತಪ್ಪೆನ್ನಲಾಗದು! ಇದಕ್ಕೆ ಹೊರತಾಗಿ ಪೋಷಕರ ಆಸರೆಯೇ ಇಲ್ಲದೆ ಬದುಕುತ್ತಿರುವ ದೊಡ್ಡ ಸಂಖ್ಯೆಯ ಮಕ್ಕಳ ಅಭಿರುಚಿ, ಭಾವನೆಗಳನ್ನು ಕೇಳುವವರಾರು? ಹೀಗಾಗಿ ಮಕ್ಕಳ ಸಾಹಿತ್ಯ ಅಲಕ್ಷಿತವಾಗುವುದಕ್ಕೂ ಮಕ್ಕಳು ಅಲಕ್ಷಿತರಾಗಿರುವುದಕ್ಕೂ ಬಹು ಮುಖ್ಯ ಸಂಬಂಧವಿದೆ. ಇನ್ನು, ಮಕ್ಕಳ ಸಾಹಿತ್ಯವೇ ಕಡಿಮೆಯಾಗುತ್ತಿದೆಯೇ ಅಥವಾ ಗುಣಮಟ್ಟದ ಬರಹಗಳು ಕಡಿಮೆಯಾಗುತ್ತಿದೆಯೆ? ಎಂಬ ಎಳೆಯನ್ನಿಟ್ಟುಕೊಂಡು ಹೊರಟರೆ ಎರಡಕ್ಕೂ ‘ಹೌದು’ ಎನ್ನುವ ಉತ್ತರವೇ ದೊರಕುತ್ತದೆ. ಇದಕ್ಕೆ ಕಾರಣ, ಪರಿಸ್ಥಿತಿ, ಸಂದರ್ಭಗಳು ಹಲವು. ಈ ಕುರಿತುಅಧ್ಯಯನ ಮಾಡಿದ ವಿದ್ವಾಂಸರ ಪ್ರಕಾರ ನಮ್ಮರಾಜ್ಯದಲ್ಲಿ ಮಾತ್ರವಲ್ಲದೆ ಇತರ ಕಡೆಯೂ ಮಕ್ಕಳ ಸಾಹಿತ್ಯದ ಸ್ಥಿತಿ ಹೀಗೆಯೇ ಇದೆ. ಮಲಯಾಳಂ ಮತ್ತು ಹಿಂದಿಯಲ್ಲಿ ಬೇರೆಲ್ಲ ಭಾಷೆಗಿಂತ `ಅಡ್ಡಿಲ್ಲ’ ಎನ್ನುವ ವಾತಾವರಣಇದೆ ಅಷ್ಟೇ. ಅಮೇರಿಕಾದಂತಹ ದೇಶದಲ್ಲಿ ಮಕ್ಕಳ ಸಾಹಿತ್ಯಕ್ಕೆ ಬಹು ಬೇಡಿಕೆ, ಜನಪ್ರಿಯತೆ ಇರುವುದು ಹೌದಾದರೂ ಪ್ರೌಢ ಸಾಹಿತ್ಯಕ್ಕೆ ಹೋಲಿಸಿಕೊಂಡರೆ ಅಲ್ಲೂ ಮಕ್ಕಳ  ಸಾಹಿತ್ಯ ಒಂದು ಹೆಜ್ಜೆ ಹಿಂದೆಯೇ! ನಮ್ಮಲ್ಲಿ ಶಿಶು ಸಾಹಿತ್ಯದ ಪ್ರಮಾಣ ಪ್ರೌಢ ಸಾಹಿತ್ಯಕ್ಕಿಂತ ಕಮ್ಮಿ ಹೌದು. ಆದರೆ ಬರವಣಿಗೆ ಕಡಿಮೆ ಎನ್ನುವುದಕ್ಕಿಂತ ಗುಣಮಟ್ಟದ ಬರಹಗಳು ಕಮ್ಮಿ ಎಂಬ ಮಾತು ಮತ್ತಷ್ಟು ಸರಿಯೆನಿಸುತ್ತದೆ. ಮಕ್ಕಳ ಸಾಹಿತ್ಯವೆಂದರೆ `ಲಘು ಸಾಹಿತ್ಯ, ಯಾರೂ ಬರೆಯಬಹುದಾದದ್ದು, ಪಾಂಡಿತ್ಯ ತಿಳುವಳಿಕೆ ಬೇಡದಿರುವುದು’ ಎಂಬ ಅಭಿಪ್ರಾಯ ಸರ್ವೇಸಾಮಾನ್ಯವಾಗಿದೆ. ಹಾಗಾಗಿ ಹೊಸತನವೇ ಇಲ್ಲದ, ಅದೇ ಹಳೆಯ ಪ್ರಾಸಗಳಿಗೆ ಜೋತುಬಿದ್ದ, ಸಾಂಪ್ರಾದಾಯಿಕ ವಸ್ತು- ನಿರೂಪಣೆಗೆ ನಿಷ್ಠವಾದ ಶಿಶುಸಾಹಿತ್ಯ ಧಂಡಿಯಾಗಿ ರಚನೆಯಾಗುತ್ತಿದೆ. ಇಂತಹ ಸವಕಲು ಸರಕೇ ಈಚೆ ಯಾರೂ ಕಣ್ಣೆತ್ತಿ ನೋಡದಿರುವುದಕ್ಕೆ ಒಂದು ದೊಡ್ಡ ಕಾರಣವೂ ಆಗಿದೆ! `ಮಕ್ಕಳಿಗಾಗಿ ಪ್ರಕಟಿಸಿದ ಪುಸ್ತಕಗಳು ಮಾರಾಟವಾಗುವುದಿಲ್ಲ’  ಎಂದು ಪ್ರಕಾಶಕರು ಚಿಂತೆ ವ್ಯಕ್ತಪಡಿಸುವುದಕ್ಕೂ ಇದೊಂದು ಪ್ರಮುಖ ಕಾರಣ. ಆದರೆ ಈ ಹೊತ್ತಲ್ಲೇ ಹೇಳಬೇಕಾದ ಮಾತೆಂದರೆ ಇತ್ತೀಚಿನ ವರ್ಷಗಳಲ್ಲಿ ಕನ್ನಡ ಮಕ್ಕಳ ಸಾಹಿತ್ಯ ಬದಲಾವಣೆಗೆ ತೆರೆದುಕೊಳ್ಳುತ್ತಿದೆ; ಅನೇಕ ಹೊಸಬರ, ಸೃಜನಶೀಲ ಬರಹಗಾರರ ಕಲ್ಪನೆಯ ಮೂಸೆಯಲ್ಲಿ ರೂಪು ಪಡೆಯುತ್ತಾ ಸಾಗಿದೆ ಎಂಬುದು. ಮಕ್ಕಳಿಗಾಗಿ ಫ್ರೆಶ್‌ ಆದ ಗದ್ಯ, ಪದ್ಯಗಳನ್ನು ಕೊಡಬೇಕೆಂಬ ತುಡಿತದಲ್ಲಿ ಇಂತವರು ಗಂಭೀರವಾಗಿ ತೊಡಗಿಸಿಕೊಂಡಿದ್ದಾರೆ. ನವೋದಯದ ಕಾಲದಲ್ಲಿ ಪಂಜೇ ಮಂಗೇಶರಾಯರು, ಕುವೆಂಪು, ಶಿವರಾಮ ಕಾರಂತ, ಹೊಯ್ಸಳ, ಜಿ.ಪಿ ರಾಜರತ್ನಂ, ಸಿದ್ದಯ್ಯ ಪುರಾಣಿಕರು ಮೊದಲಾದ ಹಿರಿಯರನೇಕರು ಬಹಳ ಆಸ್ಥೆಯಿಂದ ಮಕ್ಕಳಿಗಾಗಿ ಬರೆದಿದ್ದರು. ಅದರ ನಂತರ ಸುದೀರ್ಘಕಾಲದ ಬಳಿಕ ಕಳೆದ ಶತಮಾನದ ಕೊನೆಯ ದಶಕಗಳಲ್ಲಿ ಮತ್ತೊಮ್ಮೆ ಮಕ್ಕಳ ಸಾಹಿತ್ಯ ಚಿಗುರಿತು. ಈಗ ಪುನಃ ಅಂತಹ ದಿನಗಳು ಬರಲಾರಂಭಿಸಿವೆ ಎಂಬ ಆಶಾವಾದವನ್ನು ಮಕ್ಕಳ ಕ್ಷೇತ್ರದಲ್ಲಿ ತೊಡಗಿಕೊಂಡ ತಜ್ಞರು ವ್ಯಕ್ತಪಡಿಸುತ್ತಿದ್ದಾರೆ ಎಂಬುದನ್ನು ಈ ಸಂದರ್ಭದಲ್ಲಿ ಉಲ್ಲೇಖಿಸಬೇಕಾಗಿದೆ.    ಮಕ್ಕಳ ಸಾಹಿತ್ಯಕ್ಷೇತ್ರದ ವಿಕಾಸಕ್ಕೆ ತಡೆಯಾಗಿರುವ ಇನ್ನೊಂದು ಮುಖ್ಯ ಸಮಸ್ಯೆ `ಶ್ರೇಷ್ತ್ರತೆಯ ವ್ಯಸನ’! ಬಹಳ ಓದಿಕೊಂಡವರು, ಚಿಂತಕರು, ಗಂಭೀರ ಸಾಹಿತ್ಯ ಬರೆಯುವವರು ಮಕ್ಕಳ ಸಾಹಿತ್ಯಕೃಷಿ ಮಾಡಿದರೆ ಬೆಲೆ ಕಮ್ಮಿ ಎಂಬ ಒಂದು ಮನಸ್ಥಿತಿ ಪ್ರಚಲಿತದಲ್ಲಿದೆ. ಇದರಿಂದಾಗಿ ಮಕ್ಕಳ ಸಾಹಿತ್ಯಕ್ಕೆ ನಷ್ಟವಾಗಿದೆ ಎಂದೇ ಹೇಳಬಹುದು. ಅಂತಹ ಬರಹಗಾರರ ಸೃಜನಶೀಲತೆ, ಯೋಚನೆಗಳು ನಮ್ಮ ಮಕ್ಕಳಿಗೆ ದೊರಕಲಿಲ್ಲ. ನವೋದಯಕಾಲದ ಹಿರಿಯ ಕವಿಗಳನ್ನು ನೆನಪಿಸಿಕೊಂಡು ಈ ವಿಷಯದಲ್ಲಿ ಇನ್ನಾದರೂ ನಾವು ಬದಲಾಗಬೇಕಾದ ತುರ್ತಿದೆ. ಮಕ್ಕಳಿಗಾಗಿ ಬರೆಯುವುದು, ಮಕ್ಕಳ ಸಾಹಿತ್ಯ ಓದುವುದು ಇವೆರಡೂ ಬದುಕಿನ ಪ್ರೀತಿ, ಸರಳ ಖುಷಿ ಎಂದು ಪರಿಗಣಿಸಬೇಕಾಗಿದೆ. “ಮಕ್ಕಳಿಗಾಗಿ ಬರೆಯಬೇಕೆಂದರೆ ಮಕ್ಕಳ ಮಟ್ಟಕ್ಕೆ ನಾವು ಏರಬೇಕು” ಎನ್ನುತ್ತಾರೆ. ಏರುವುದೋ, ಇಳಿಯುವುದೋ ಒಟ್ಟಿನಲ್ಲಿ ಬರಹಗಾರನೇ/ಳೇ ಮಗುವಾಗಬೇಕಾದದ್ದು ಮೊದಲ ಅಗತ್ಯ. ಮಗುವಿನ ಮುಗ್ಧತೆ, ಕುತೂಹಲ, ಪ್ರಾಮಾಣಿಕತೆ ಮೊದಲಾದವು ಈ ಬರಹಗಾರರಲ್ಲಿ ಹುದುಗಿರಬೇಕಾದ ಬಹು ಮುಖ್ಯ ಅಂಶ. ಹೀಗೆ ಮಗುವೇ ಆಗಿ ಪರಕಾಯ ಪ್ರವೇಶ ಮಾಡಿದಾಗ ಮಾತ್ರ ಒಂದೊಳ್ಳೆ ಪದ್ಯವೋ, ಕತೆಯೋ ಬರೆಯಲು ಸಾಧ್ಯ. ದಿನನಿತ್ಯದ ದಂದುಗದಲ್ಲಿ ಏಗಿ ಸೂಕ್ಷ್ಮತೆಯನ್ನು, ಮಗುತನವನ್ನು ಕಳೆದುಕೊಂಡು ಜಡ್ಡುಬಿದ್ದಿರುವ ನಮ್ಮಂತಹ ದೊಡ್ಡವರಿಗೆ ಇದು ಕಷ್ಟವೆ! ಈ ಕಾರಣಕ್ಕಾಗಿಯೂಗುಣಮಟ್ಟದ ಮಕ್ಕಳ ಸಾಹಿತ್ಯ ಕಡಿಮೆಯಾಗಿರಬಹುದು. ಇಲ್ಲಿಯೇ ಚರ್ಚಿಸಬೇಕಾದ ಮತ್ತೊಂದು ಅಂಶವೆಂದರೆ ಮಕ್ಕಳ ಸಾಹಿತ್ಯಎಂದೊಡನೆ ಅದು `ಸರಳ’ ಆಗಿರಬೇಕು ಎಂಬ ತೀರ್ಮಾನಕ್ಕೆ ಬಂದುಬಿಡುವುದು! ಕೇಳಿ ಕೇಳಿ ಬೇಸರ ತರಿಸಿರುವ ಮಾದರಿಯನ್ನೇ ಆಯ್ದುಕೊಂಡು ಸರಳತೆಯ ಹೆಸರಲ್ಲಿ ಏನೋ ಬರೆದು ಬಿಡುವುದು! ಪುಟಾಣಿ ಮಗುವಿನಿಂದ ಹಿಡಿದು ಹದಿನೈದು-ಹದಿನಾರು ವರ್ಷದವರೆಗಿನ ಮಕ್ಕಳೂ ಈ ಸಾಹಿತ್ಯದ ವ್ಯಾಪ್ತಿಯಲ್ಲಿ ಪರಿಗಣಿತವಾಗುವುದರಿಂದ ರಚನೆಗಳಲ್ಲೂ ವೈವಿಧ್ಯತೆ ಇರಬೇಕಾದದ್ದು ಸಹಜ. ಆದರೆ ಯಾವ ವಯಸ್ಸಿನ ಮಕ್ಕಳಿಗೆ ಬರೆದದ್ದೇ ಇರಲಿ; ಗುಣಮಟ್ಟದ್ದಾಗಿದ್ದರೆ ಅದು ದೊಡ್ಡವರೂ ಓದಿ ಖುಷಿಪಡುವಂತಿರುತ್ತದೆ! ಹೀಗಾಗಿ ಮಕ್ಕಳ ಸಾಹಿತ್ಯ ಎಂದು ಪ್ರತ್ಯೇಕಿಸುವುದು ಸಾಹಿತ್ಯದ `ಪ್ರಕಾರ’ ಗುರುತಿಸುವುದಕ್ಕಾಗಿ, ವಿಮರ್ಶೆಯ ಸವಲತ್ತಿಗಾಗಿ ಮತ್ತೂ ಹೆಚ್ಚೆಂದರೆ ಪ್ರಶಸ್ತಿಗಳ ಪ್ರವೇಶಾತಿಗಾಗಿ ಅಷ್ಟೇ. ಪೂರ್ಣಚಂದ್ರ ತೇಜಸ್ವಿ ಅವರ ವಿಸ್ಮಯ, ದೇಶ-ವಿದೇಶ ಸರಣಿಯ ಪುಸ್ತಕಗಳು, ಅಮೇರಿಕಾದ ಲಾರಇಂಗಲ್ಸ್ ವೈಲ್ಡರ್ ಬರೆದ ಕಾದಂಬರಿ ಸರಣಿ ಇಂತಹ ಸಾಹಿತ್ಯವನ್ನು ಗಮನಿಸಿದರೆ ದೊಡ್ಡವರು-ಮಕ್ಕಳು ಎಂಬ ಭೇದವಿಲ್ಲದೆ ಓದುವಿಕೆ ಇರುತ್ತದೆ ಎಂಬುದು ನಮ್ಮ ಗಮನಕ್ಕೆ ಬರುತ್ತದೆ. ಮಕ್ಕಳ ಸಾಹಿತ್ಯವೆಂದರೆ ಬರೀ ಪಂಚತಂತ್ರದ ಕತೆಗಳು, ಪ್ರಾಸಪದ್ಯಗಳು, ಕಥನಕವನಗಳು, ರಾಜರಾಣಿಯ ಕತೆಗಳು, ಪೌರಾಣಿಕ ವಿಷಯಗಳು ಅಲ್ಲ; ಇದರಾಚೆಗೆ ಅನೇಕ ವಸ್ತು-ವಿಷಯ-ನಿರೂಪಣೆಯ ಮಾಧ್ಯಮವಿದೆ ಎಂಬುದನ್ನು ಅರ್ಥೈಸಿಕೊಳ್ಳಬೇಕಾಗಿದೆ. ಅಳಿಲು, ಬೆಕ್ಕು, ನಾಯಿ, ಇರುವೆ, ಗೂಬೆ, ಬಸವನ ಹುಳು, ಇಲಿ, ಹೂವು, ಗಿಡಮರಗಳು, ಬದಲಾದ ಈ ಕಾಲದ ಮಗುವೊಂದರ ಖುಷಿ-ಸಂಕಷ್ಟಗಳು ಹೀಗೆ… ವಿಫುಲ ವಿಷಯಗಳಿವೆ. ಲಲಿತ ಪ್ರಬಂಧ, ಕಾದಂಬರಿ, ಪುಟಾಣಿಕತೆ, ಅನುಭವಕಥನ, ಫ್ಯಾಂಟಸಿಗಳು ಹೀಗೆ ವಿವಿಧ ಅಭಿವ್ಯಕ್ತಿಯ ಪ್ರಕಾರಗಳಿವೆ…..  ಈ ಸಂದರ್ಭದಲ್ಲಿ ಒಂದು ಮುಖ್ಯ ಪ್ರಶ್ನೆಯನ್ನು ಎತ್ತಿ ಈ ಬರಹವನ್ನು ಮುಗಿಸುತ್ತೇನೆ. `ಮಕ್ಕಳ ಸಾಹಿತ್ಯ’ ಒಂದು ಸಾಹಿತ್ಯ ಪ್ರಕಾರವಲ್ಲವೆ? ಸಣ್ಣಕತೆ, ಕವಿತೆ, ನಾಟಕ, ಕಾದಂಬರಿ, ಆತ್ಮಕಥೆ, ಜೀವನಚರಿತ್ರೆ, ವಿಚಾರಸಾಹಿತ್ಯ, ಪ್ರಬಂಧ ಹೀಗೆ ಇವೆಲ್ಲವೂ ವಿಮರ್ಶೆಗೆ, ಓದಿಗೆ, ಮರುಓದಿಗೆ ಒಳಪಡುತ್ತಿರುವ ಈ ಹೊತ್ತಿನಲ್ಲಿ ಮಕ್ಕಳ ಸಾಹಿತ್ಯವನ್ನೇಕೆ ಮೂಲೆಗುಂಪಾಗಿಸಲಾಗಿದೆ? ಕನಿಷ್ಠ ಒಂದು ಓದು, ವಿಮರ್ಶೆ, ಒಂದು ಗಮನಿಸುವಿಕೆಯನ್ನಾದರೂ ಈ ಸಾಹಿತ್ಯ ಕೃತಿಗಳು ಬಯಸಬಾರದೇ? ಕನಿಷ್ಠ ಒಂದು ಮೆಚ್ಚುಗೆಯ ಮಾತಾದರೂ ಮಕ್ಕಳ ಸಾಹಿತಿಗೆ ದೊರಕಬಾರದೆ? ಪ್ರೌಢ ಸಾಹಿತ್ಯದ ಮನ್ನಣೆಯ ಅಬ್ಬರದಲ್ಲಿ ನಿರ್ಲಕ್ಷಿತ ಮಕ್ಕಳ ಸಾಹಿತ್ಯ ಕೊಚ್ಚಿಹೋಗಬೇಕೆ? ಇದು ಖಂಡಿತಾ ಸರಿಯಲ್ಲ. ಪ್ರಜ್ಞಾವಂತ ಓದುಗರು, ವಿಮರ್ಶಕರು ಈ ಕುರಿತು ಗಮನ ಹರಿಸಲೇಬೇಕು. (ಪ್ರೋತ್ಸಾಹದದೃಷ್ಟಿಯಿಂದ ಸಾಹಿತ್ಯಅಕಾಡಮಿಯಿಂದ ತೊಡಗಿಇತರ ಕೆಲವು ಸಂಸ್ಥೆಗಳು ಕೊಡಮಾಡುವ ಕೆಲ ಪ್ರಶಸ್ತಿ, ಪುರಸ್ಕಾರಗಳು ಮಕ್ಕಳ ಸಾಹಿತ್ಯಕ್ಕಿವೆ ಎಂದು ಇಲ್ಲಿ ನೆನಪಿಸಿಕೊಳ್ಳುವೆ). ಮಕ್ಕಳ ಸಾಹಿತ್ಯ ಅಲಕ್ಷಿತವಾದರೆ ನಮ್ಮ ಮಕ್ಕಳು ಅಲಕ್ಷಿತವಾದಂತೆ, ಅವರು ಮೂಲೆಗುಂಪಾದರೆ ಇಡೀ ಸಮಾಜವೇ ಮೂಲೆಗುಂಪಾದಂತೆ ಎಂಬ ಎಚ್ಚರಿಕೆ ನಮ್ಮಲ್ಲಿರಬೇಕಾದದ್ದು ಅತ್ಯಗತ್ಯ.  ಪ್ರೌಢ ಸಾಹಿತ್ಯ ಮತ್ತು ಮಕ್ಕಳ ಸಾಹಿತ್ಯ ಎರಡರಲ್ಲೂ ಗಂಭೀರವಾಗಿ ತೊಡಗಿಕೊಂಡು ಉತ್ತಮ ಕೃತಿಗಳನ್ನು ನೀಡುತ್ತಿರುವ ಬರಹಗಾರರ ಸಂಖ್ಯೆ ಹೆಚ್ಚುತ್ತಿದೆ ಎಂಬುದು ಸಂತಸದ ಸಂಗತಿ. ಹಾಗೇ ಪುಸ್ತಕವನ್ನು ಕೊಂಡು ಓದುವ ಸಂಸ್ಕೃತಿಯೂ ಬೆಳೆಯಲಿ. ಮಕ್ಕಳ ಸಾಹಿತ್ಯ ಕೃತಿಗಳನ್ನು ಮಕ್ಕಳು, ದೊಡ್ಡವರು ಸಮಾನವಾಗಿ ಓದಬಲ್ಲ ಪೂರಕ ವಾತಾವರಣ ಸೃಷ್ಟಿಯಾಗಲಿ ಎನ್ನುವುದು ಪ್ರಜ್ಞಾವಂತರೆಲ್ಲರ ಆಶಯ. **************************************************

ಅಲಕ್ಷ್ಯಕ್ಕೊಳಗಾಗಿರುವ ಮಕ್ಕಳ ಸಾಹಿತ್ಯ Read Post »

ಇತರೆ

ಕೊಂಕಣಿ ಕವಿ ಪರಿಚಯ

ಕೊಂಕಣಿ ಕವಿ ಪರಿಚಯ ಫೆಲ್ಸಿ ಲೋಬೊ ಶ್ರೀಮತಿ ಫೆಲ್ಸಿ ಲೋಬೊಶಿಕ್ಷಕಿ, ಸಂತ ಎಲೋಶಿಯಸ್ ಪ್ರೌಢಶಾಲೆ, ಮಂಗಳೂರು.ಹವ್ಯಾಸ: ಕವನ, ಲೇಖನ ಬರಹಕನ್ನಡ, ಕೊಂಕಣಿ, ತುಳು ಭಾಶೆಗಳಲ್ಲಿ.ಕೊಂಕಣಿಯ, ರಾಕ್ಣೊ, ಉಜ್ವಾಡ್, ಸೆವಕ್, ಮುಂತಾದ ಪತ್ರಿಕೆಗಳಲ್ಲಿ, ವೀಜ್ ಪಾಕ್ಶಿಕ ದಲ್ಲಿ, ಕವಿತಾ ಡಾಟ್ ಕಾಮ್ ಗಳಲ್ಲಿ ಬರಹಗಳ ಪ್ರಕಟವಾಗಿದೆ. ಕವಿಗೋಶ್ಟಿಗಳಲ್ಲಿ ಭಾಗವಹಿಸುವಿಕೆ, ವಿವಿಧ ಸಾಹಿತ್ಯ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಲಾಗಿದೆ. ಆಕಾಶವಾಣಿ ಮಂಗಳೂರು ರೇಡಿಯೊ ಹಾಗೂ ಸಾರಂಗ್ ರೇಡಿಯೊ ದಲ್ಲಿ ಕಾರ್ಯಕ್ರಮಗಳು ಪ್ರಸಾರ ಕಂಡಿವೆ. ” ಗರ್ಜೆತೆಕಿದ್ ಗಜಾಲಿ” ಎಂಬ ಚೊಚ್ಚಲ ಲೇಖನ ಪುಸ್ತಕ ಪ್ರಕಟವಾಗಿದೆ. ವಿದ್ಯಾರ್ಥಿಗಳನ್ನು ಸಾಹಿತ್ಯಾಸಕ್ತಿ ಬೆಳೆಸಲು ವಿವಿಧ ಸ್ಪರ್ಧೆಗಳಿಗೆ ಪ್ರೋತ್ಸಾಹಿಸಿ ಕಳುಹಿಸಲಾಗಿದೆ. ಸೃಜನಾತ್ಮಕ ಬರಹಗಳಿಗೆ ಪ್ರೋತ್ಸಾಹಿಸಿ, ಚುಟುಕುಗಳ ಸಂಗ್ರಹ” ಝೇಂಕಾರ” ಪ್ರಕಟಗೊಂಡಿದೆ. ಜೆಸಿಐ ಮಂಗಳೂರು, ಲಾಲ್ ಭಾಗ್ ರವರು ಶಿಕ್ಷಕರ ದಿನದಂದು, ಬಹುಮುಖ ಪ್ರತಿಭಾ ಶಿಕ್ಷಕಿ ಸನ್ಮಾನ ನೀಡಿ ಗೌರವಿಸಿರುತ್ತಾರೆ. ಫೆಲ್ಸಿ ಲೋಬೊ ಅವರು ಬರೆದ ಕೊಂಕಣಿ ಮತ್ತು ಕನ್ನಡ ಕವಿತೆಗಳು ನಿಮ್ಮೆಲ್ಲರಿಗಾಗಿ. ತಾಂಚೆ ಫಾತರ್ ಆನಿ ಹಾಂವ್~~~ ಕೊಣಾಯ್ಚ್ಯಾ ಹೆಳ್ಕೆ ವಿಣೆಕಿರ್ಲೊನ್ ವಾಡ್ಲೆಲ್ಯಾ ದೆಣ್ಯಾಂರುಕಾರ್ ಕಾಳಾ ತೆಕಿದ್ಕೊಂಬ್ರೆ, ಫಾಂಟೆ ವಿಸ್ತಾರ್ಲೆಸೊಪ್ಣಾಂಚ್ಯಾ ಪಿಶ್ಯಾ ಫುಲಾಂನಿದೆಖ್ತೆಲ್ಯಾಕ್ ಪಿಶ್ಯಾರ್ ಘಾಲೆಂ ಬರಿಂ ಫುಲಾಂ ಘೊಸ್ ಭಾಂದ್ತಾನಾಫಳಾಂನಿ ಆಸ್ರೊ ಸೊದ್ಲೊಫಳಾ ರುಚಿಂನಿ ಗರ್ಜೊಥಾಂಭಯ್ತಾನಾ, ತಾಣಿಂಫಾತರ್ ವಿಂಚ್ಲೆ ಸುರ್ವೆರ್ ಹಳ್ತಾಚೆ ಮಾರ್ವಾಡಾತ್ತ್ ಗೆಲೆ ವರ್ಸಾಂಭರ್ಮಾರ್ಲೆಲ್ಯಾ ಹರ್ ಫಾತ್ರಾಂಕಿಹಗೂರ್ ವಿಂಚುನ್ ಪೆಳಿ ಭಾಂದ್ಲಿ ತುಮಿ ಮಾರ್ಲೆಲ್ಯಾ ಹರ್ ಫಾತ್ರಾಂಕಿಮೋಲ್ ಭಾಂದ್ಲಾಂವೆಂಪೆಳಿಯೆರ್ ಬಸೊನ್ಲಿಖ್ತಾಂ ಆಜ್ ಯಾದಿಂಚ್ಯೊ ವೊಳಿ ತುಮಿ ಛಾಪ್ಲೆಲ್ಯಾ ಪಯ್ಲ್ಯಾ ಪಾನಾಕ್ಆಜ್ ಹಾಂವೆ ಲಿಖ್ಚ್ಯಾ ಹರ್ ಪಾನಾಂಕ್ಫರಕ್ ಇತ್ಲೊಚ್ಫಾತ್ರಾಂ ಪೆಳಿಯೆ ಥಾವ್ನ್ ಖಾಂತ್ಚ್ಯಾಉತ್ರಾಂ ಪಾಟ್ಲ್ಯಾನ್ ನಾಂವ್ ಆಸಾಅನಾಮಿಕ್ ನೈಂ ನಿಮ್ಮ ಕಲ್ಲ ಬೆಂಚು~~~~ನನಗರಿವಿಲ್ಲದೆಯೆ ಬೆಳೆದುಹೆಮ್ಮರವಾದ ಸದ್ಗುಣದ ಮರದಎಳೆ ಚಿಗುರು, ಕೊಂಬೆಬಲಿತ ರೆಂಬೆಗಳೆಡೆಯಲಿಅದಾಗಲೆ ಹುಚ್ಚು ಹೂಗಳ ಸರದಿ ಹೀಚು ಕಾಯದು ಬೆಳೆದುಕಾಯಾಗಿ ಬಲಿತು ಬಲು ರುಚಿಯಿಂದ ನಿಮ್ಮ ಒಲಿದಾಗಕಲ್ಲೆಸೆದು ಕೊಯ್ದವರೆತುಸು ತಾಳಿ ಎಸೆದ ಒಂದೊಂದು ಕಲ್ಲತಾಳ್ಮೆಯಿಂ ಶೇಖರಿಸಿ ಬೆಂಚೊಂದಕಟ್ಟಿರುವೆನುಅಲ್ಲೆ ಕುಳಿತು ತಿರುಚುವ ಒಂದೊಂದುಕಾಗುಣಿತಕ್ಕು ಎತ್ತಣಿಂದೆತ್ತ ಸಂಬಂಧ ! ಪ್ರಹಾರಗಳ ನೋವು ಆರಿಕಲ್ಲು ಬೆಂಚು ಬೆಳೆದಿದೆ ಹೆಗಲೇರಿನಿಮ್ಮ ಹಾಳೆಯಂತಲ್ಲಇಲ್ಲಿ ಪೋಣಿಸುವ ಒಂದೊಂದುಅಕ್ಷರದ ಹಿಂದೊಂದು ಹೆಸರಿದೆಇದು ಅನಾಮಿಕವಲ್ಲ ಪ್ರಶಸ್ತಿ ನಾತ್ಲೆಲೆ ಪಾತ್ರ್ # ಜಿವಿತಾಚ್ಯೆ ರಂಗ್ ಮಾಂಚಿಯೆರ್ಉಂಚ್ಲೆ ಪಾತ್ರ್ ತುಜೆಪಾಳ್ಣ್ಯಾ ಥಾವುನ್ ಪೆಟೆ ಪರ್ಯಾಂತ್ವಿಚಾರ್ ಖೂಬ್ ಗರ್ಜೆಚೆ ರಂಗಾಳ್ ಆಂಗ್ಲಿಂ ನ್ಹೆಸೊನ್ಆಂಗಣ್ ಭರ್ ಚರ್ಲೆಲಿಂ ಪಾವ್ಲಾಂವಾಡೊನ್ ಎತಾಂ ಭಂವ್ತಿಲ್ಯಾ ದೊಳ್ಯಾಂಚಿಭುಕ್ ಥಾಂಭಂವ್ಚೆಂ ಆಹಾರ್ ಜಾತಾತ್ ಘರ್ಚ್ಯಾ ಚಲಿಯೆ ಖಾತಿರ್ಸೆಜ್ರಾ ಉಠ್ತಾ ಆಕಾಂತ್ದೊಳೆಚ್ಚ್ ಕೆಮರಾ ಜಾವುನ್ ಬಾಬಾಚಾರ್ ಕುಶಿಂ ಥಾವುನ್ ರಾಕೊನ್ ಥಕ್ತಾತ್ ಪಾಯ್ಜಾಣಾಂಗೊ ತುಜಿಂ ಆವಾಜಾವಿಣ್ಝಳ್ಜಳಿತ್ ವಸ್ತ್ರಾಂ ಬಾವ್ಲ್ಯಾಂತ್ ರಂಗ್ ಉಬೊವ್ನ್ದಿವ್ಳಾ ಭಿತರ್ ವೆಶಿ ದೇವ್ ಕೊಪ್ತಾ ಮಣ್ತಾತ್ವಚಾನಾ ಜಾಶಿ ಬುರ್ಬುರೆಂ ವೊಡುನ್ದೆವಾ ಹುಜ್ರಿಂಚ್ ಮಾನ್ ಲುಟ್ತಾತ್ ದೇವಿ ತೂಂ , ನಾ ತುಕಾ ಪೂಜಾ ಸನ್ಮಾನ್ಉಜ್ವಾಡ್ ತೂಂ , ನಾ ತುಕಾ ಸಂಭ್ರಮ್ಕಾಂಪಿಣ್ ಮಾರ್ತೆಲ್ಯಾ ಪೂಜಾರಿಕ್ ಯಿಗುಪ್ತಿಂ ಲಿಪ್ತಿಂ ಗರ್ಜ್ ತೂಂಬಗ್ಲೆ ನಿದ್ತೆಲ್ಯಾಚ್ಯಾ ನಿಳ್ಯಾ ಪಿಂತುರಾಂಕ್ ಯಿಸಂಪನ್ಮೂಳ್ ತೂಂ ಕೆನ್ನಾ ಪಾಪ್ಸುಂಕ್ ತುಕಾ ದಾವ್ಲ್ಯೊ ರಾಕ್ತಾತ್ಪ್ರತಿಭಾ ಪಿಸ್ಡುಂಕ್ ಸುಣಿಂ ವಾಗ್ಟಾಂ ವಾವುರ್ತಾತ್ಗುಡ್ಡಾಯ್ತೆಲ್ಯಾಂ ಮಧೆಂ ಮಿಲಾವಾಚಿ ಪುತ್ಳಿ ಜಾ — ರಾವ್ ಉಭೆಂತುಜ್ಯಾ ವೆಕ್ತಿತ್ವಾಚಿ ವಳಕ್ ತರಿ ಜಾಯ್ತ್ ? ಉಭಾರುನ್ ವರ್ ಪರ್ವತಾಚೆರ್ ತುಜೊ ತಾಳೊಕಿಂಕ್ರಾಟೆಂತ್ ಆಸೊಂ ಜಯ್ತಾಚೊ ವ್ಹಾಳೊಅಬಲ್ ನೈಂ ತುಂ , ಪೌರುಷಾಚ್ಯೆ ನದ್ರೆಂತ್ಲೆಂಅಬಲ್ಪಣಾಚೆಂ ಕೂಸ್ ಹುಮ್ಟಿಲಾಂಯ್ ತೆಂ ಪಾಚಾರ್ ಕುಟ್ಮಾ ಸಂಸಾರ್ ಸೆಜ್ ಸಾಮಾರಾಂತ್ಖೂಬ್ ಜಾಗ್ ಉಠಯ್ತಾಂ ತುಜಿ ಹಾಜ್ರಿಮೆಲ್ಲ್ಯಾ ಮೊಡ್ಯಾಂಕ್ ಕಳಾತ್ ಕಶಿ ಶಾಥಿ ತುಜಿ?ಸಾಧನೆಚ್ಯಾ ಧಾಂವ್ಣೆಂತ್ ಥಾಂಭ್ಚಿ ಗರ್ಜ್ ನಾಕಾ ಆಜಿ , ಆವಯ್ , ಧುವ್ , ಸುನ್ , ಭಯ್ಣ್ವಿಭಿನ್ನ್ ಪಾತ್ರಾಂನಿ ಭರ್ಪೂರ್ ಜೀವ್ ಭರ್ತಾಯ್ಆಧಾರ್ ಗರ್ಜ್ ಆಸ್ಚ್ಯಾ ನಾಸ್ಚ್ಯಾಂಕಿತೆಂಕೊ ದಿಲಾಯ್ಪ್ರಶಸ್ತಿ ನಾಸ್ಲೆಲೆ ಪಾತ್ರ್ ತುಜೆ ನಿಮ್ಣೆಂ ಪಯ್ಣ್ ಸಂಪ್ತಚ್ಆವಯ್ ಗರ್ಭಾಂತ್ ಆಸ್ರೊ ಘೆತಾಯ್ಮಾತಿಯೆ ವಾಸ್ ಚಡಂವ್ಕ್ಜರೂರ್ ಕಾಡ್ತಾಂ ಯಾದ್ ತುಜಿಪಯ್ಲ್ಯಾ ಪಾವ್ಸಾ ಥೆಂಬ್ಯಾಚ್ಯಾ ಪರ್ಮೊಳಾಂತ್ ಪ್ರಶಸ್ತಿಗಳಿಲ್ಲದ ಪಾತ್ರಗಳು ಬಾಳ ರಂಗಮಂಚದಲಿ ನಿನ್ನ ಪಾತ್ರಗಳೆಲ್ಲವು ಉನ್ನತವೆತೊಟ್ಟಿಲಿನಿಂದ ಶವದ ಪೆಟ್ಟಿಗೆಯ ತನಕವಿಚಾರಗಳು ಮನಮುಟ್ಟುವಂತವೆ ಬಣ್ಣದಂಗಿಯ ತೊಟ್ಟು ಅಂಗಳದೆಲ್ಲೆಡೆಓಡಾಡಿದ ಪುಟ್ಟಪಾದಗಳುಬೆಳೆದಂತೆಲ್ಲ ಸುತ್ತಲ ಹಸಿದ ಕಂಗಳಿಗೆಆಹಾರವಾಗುವವು ಅರಿಯದೆಯೆ. ಈ ಮನೆಯ ಮಗಳಿಗಾಗಿ ನೆರೆಮನೆಗಳಲಿ ಯಾತಕೋ ಆತಂಕ!ತೆರೆದ ಕಣ್ಣೇ ಕ್ಯಾಮೆರಾಗಳಾಗುತನಾಲಕ್ಕು ದಿಕ್ಕುಗಳಲೂ ಕಾವಲು ಝಣ್ ಗುಡುವ ಗೆಜ್ಜೆಗಿಂದು ವಿಶ್ರಾಂತಿಝಗಮಗಿಸುವ ಉಡುಗೆಗಿಲ್ಲ ಕಳೆಗುಡಿಯೊಳಗ ಹೋದೆಯೆಂದುಕೋಪಿಸುವ ಜನಹೋಗದಿರೆ ಧರಧರನೆಳೆದು ನಿನ್ನದೇವನೆದುರೆ ಮಾನಗೆಡಿಸುವರಣ್ಣಾ ದೇವಿಯಲ್ಲವೆ ನೀ ನಿನಗೇತಕೊಪೂಜೆ ಸನ್ಮಾನ?ಬೆಳಕಂತೆ ನೀ ಏತಕೋ ಸಂಭ್ರಮವು?ಗುಡಿಯ ದೇವನ ತೊಳೆತೊಳೆದುಪೂಜೆಗೈವ ಪೂಜಾರಿಗೂಗುಟ್ಟಿನಲಿ ಬೇಕಲ್ಲ ನೀನೆನೀಲಿ ಚಿತ್ರಗಳಿಗು ಸಂಪನ್ಮೂಲ? ಕೆನ್ನಾಲಗೆಯಾಗಿ ಸುಡಲುಪ್ರತಿಭೆಗಳ ದಮನಿಸಲು ಕಾದಿವೆನರಿ ತೋಳಗಳ ಹಿಂಡು ಹಸಿದುಕಂಚಿನ ಪ್ರತಿಮೆಯಾಗಿ ನಿಂತುಬಿಡುಒದ್ದು ತುಳಿವವರ ಮಧ್ಯೆಭವ್ಯ ವ್ಯಕ್ತಿತ್ವದ ಅರಿವಾಗಲವರಿಗೆ ! ಉತ್ತುಂಗಕೇರಿಸು ಪರ್ವತಗಳ ಸೀಳಿಪ್ರತಿಧ್ವನಿಸಲಿ ನಿನ್ನುಲಿಯುಪ್ರತಿ ಚೀರಾಟದಲೂ ಬೆಸೆದಿರಲಿಜಯದ ಹರಿವುಅಬಲೆಯಲ್ಲ ನೀನು ಪೌರುಷದ ದಿಟ್ಟಿಯಲ್ಲಡಗಿದ ಅಪನಂಬಿಕೆಯ ಬೇರಕಿತ್ತು ಜಗಕೆ ಸಾರು ಕುಟುಂಬ ನೆರೆಯ ವಠಾರದಿ ಬೀರುವಸಾಂತ್ವನದ ಎಚ್ಚರದ ಹಾಜರಿಯಲಿನಿನ್ನಿರುವ ಲಕ್ಷಣದ ಅರಿವಾದರುಎಲ್ಲಿಹುದು ಸತ್ತ ಹೆಣಗಳಿಗೆ?ಸಾಧನೆಯ ಹಾದಿಯಲಿ ಹಿಂದೆನೋಡದಿರು, ತಂಗದಿರು ಅಜ್ಜಿ, ತಾಯಿ, ಮಗಳುಸೊಸೆ, ತಂಗಿಯಂದದಿ ವಿಭಿನ್ನಪಾತ್ರಗಳ ಜೀವವಾಗಿಬೇಡಿದ, ಬೇಡದವಗೂ ಆಸರೆಯನೀಡಿದ ನಿನ್ನೆಲ್ಲ ಪಾತ್ರಗಳಿಗೆಪ್ರಶಸ್ತಿಗಳಿಲ್ಲ ಕಾಣು ! ಬಾಳಪಯಣವು ಅಂತ್ಯವಾದಂತೆಭುವಿಯ ಗರ್ಭದೊಳು ಲೀನವಾಗಿರುವನಿನ್ನ ಸ್ಮರಣೆಯೆ ಪುನರಪಿ ಎನಗೆಮೊದಲ ಹೂಮಳೆಯು ಸೂಸ್ವ ಕಂಪಿಗೆಊರೆಲ್ಲ ಪಸರಿಸುವ ತಂಪಿಗೆ. *************************************** ಶೀಲಾ ಭಂಡಾರ್ಕರ್

ಕೊಂಕಣಿ ಕವಿ ಪರಿಚಯ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ರೇಷ್ಮಾ ಕಂದಕೂರ ಮಾತು ಮೌನಗಳ ನಡುವಿನ ಸಮರಕೆ ಕೊನೆಯಿಲ್ಲಸಹನೆಯ ಹೆಸರಿಗೆ ಕಿಂಚಿತ್ತೂ ಬೆಲೆಯಿಲ್ಲ ರೋಗಗ್ರಸ್ತ ಮನಸಿಗೆ ಉಪಶಮನದ ಅವಶ್ಯಕತೆ ಇದೆಚಿಗುರೊಡೆದೆ ಬಾಂಧವ್ಯಕೆ ಸಹಕಾದರ ಬಳುವಳಿಯಿಲ್ಲ ಜಗದ ಜಂಜಡಕೆ ನಿತ್ಯ ರಂಗುರಂಗಿನ ಆಟಉದ್ವೇಗ ವಿಷಾದದ ನಡುವಿನ ಪ್ರಸ್ತಾವನೆಗೆ ಕೊನೆಯಿಲ್ಲ ಬಡಿವಾರದಿ ಊಹಾಪೋಹಗಳು ತುಂಬಿ ತುಳುಕಿವೆಹಮ್ಮಿನ ಕೋಟೆಯಲಿ ಮೆರೆದವರಿಗೆ ಉಳಿಗಾಲವಿಲ್ಲ ಅಂಗಲಾಚಿ ಬೇಡುತಿದೆ ಭಿನ್ನತೆಗೆ ವಿರಮಿಸೆಂದು ರೇಷಿಮೆ ಮನಒಳಗಣ್ಣು ತೆರೆಯದೆ ನಿರ್ಣಯಿಸಿದರೆ ಕೊಡಲಿ ಏಟಿಗೆ ಕೊನೆಯಿ *****************************

ಗಝಲ್ Read Post »

ಕಾವ್ಯಯಾನ

ಹಗಲಲಿ ಅರಳದ ವಿರಹಿಣಿ

ಕವಿತೆ ಹಗಲಲಿ ಅರಳದ ವಿರಹಿಣಿ ಅನಿತಾ ಪಿ. ಪೂಜಾರಿ ತಾಕೋಡೆ ಅಂದು…ಹಿಂದೆಂದೂ ಮೂಡದ ಒಲವೊಂದು ಅನುವಾದಾಗಅವನ ಹಿರಿತನವನು ಮರೆತುನನ್ನ ಮಗುತನವನೇ ಪೊರೆದುಇತಿ ಮಿತಿಯ ರೇಖೆಗಳಿಂದ ಮುಕ್ತವಾಗಿಹಕ್ಕಿಹಾಡನು ಮನಬಿಚ್ಚಿ ಹಾಡಿದಾಗಲೆಲ್ಲಅವನು ಕೇಳುತ್ತಿದ್ದುದೊಂದೇ ನಿತ್ಯ ದಗದಗಿಸುತ್ತಲೇ ಊರೂರು ಸುತ್ತುವಮುಟ್ಟಿದರೆ ಮುನಿದು ಬಿಡುವಕಟು ಮನಸ್ಸಿನ ಸೂರ್ಯ ನಾನುಎಲೇ ಮುದ್ದು ಪಾರಿಜಾತವೇನಾನೆಂದರೆ ನಿನಗ್ಯಾಕೆ ಇಷ್ಟೊಂದು ಪ್ರೀತಿ ಆಗ…ನನ್ನಾಲಯದಲ್ಲಿ ಅವನು ಇನ್ನಷ್ಟು ಪ್ರಕಾಶವಾಗುತ್ತಿದ್ದಬೆಳ್ಳನೆ ಹೊಳಪು ಕೇಸರಿ ಕದಪಿನಲಿ ರಂಗು ಮೂಡಿಅವನಿರುವಿನಲಿ ಇನಿತಿನಿತಾಗಿ ಕರಗುತ್ತಲೇನಾನೆಂದಿಗೂ ನಿನ್ನವಳೆನ್ನುತಿದ್ದೆ ಅವನೂ ಸುಮ್ಮನಿರುತಿರಲಿಲ್ಲನನ್ನ ಇತಿಹಾಸವನೇ ಬಯಲಿಗೆಳೆಯುತಿದ್ದಸುರಭಿ ವಾರಿಣಿಯರ ಸಾಲಿನವಳುಕ್ಷೀರ ಸಮುದ್ರದೊಳವಿರ್ಭವಿಸಿದಪಂಚವೃಕ್ಷಗಳಲಿ ನೀನೋರ್ವಳುಇಂದ್ರನ ನಂದನವನದಲ್ಲಿ ಪಲ್ಲವಿಸಿದವಳುಸತ್ಯಭಾಮೆಯೊಲವಿಗೆ ಕೃಷ್ಣ ನ ಜೊತೆ ಬಂದವಳುನಿನಗ್ಯಾಕೆ ನನ್ನ ಸಾಂಗತ್ಯ ಬಯಕೆ? ವಾದ ವಿವಾದಗಳ ನಡುವೆ ಪ್ರೀತಿ ನಿಜವಾಗಿದ್ದು ಸುಳ್ಳಲ್ಲನನಗೂ ಅವನಿಗೂ ಬಾನು ಭುವಿಯಷ್ಟೇ ಅಂತರವಿದ್ದರೂಕ್ಷಣಕ್ಷಣಕೂ ನನ್ನ ಸನ್ನಿಧಿಯಲ್ಲೇ ಇರುತಿದ್ದನಲ್ಲಾ… | ಕೆಲವೊಮ್ಮೆ ಕಪ್ಪು ಮೋಡ ಕವಿದುಪರಿಛಾಯೆಯ ಲವಲೇಶವಿಲ್ಲದೆಹೇಳದೇ ಕೇಳದೇ ಏಕಾಏಕಿ ಮರೆಯಾದಾಗಕಾಯುವಿಕೆ ಅಸಹನೀಯವಾಗಿಅವನ ಓರಗೆಯವರಲ್ಲಿ ವಿಚಾರ ಮಾಡಿದ್ದುಂಟುಅವನ ಕ್ಷೇಮದ ಸುದ್ದಿ ತಿಳಿಯಲು ಹುಚ್ಚಳಾಗಿದ್ದುಂಟು ನಿತ್ಯ ಹೊಸದಾಗಿ ಅರಳುವ ನಾನುಒಂದೊಂದು ನೆಪ ಹೇಳಿ ಇಲ್ಲವಾಗುವ ಅವನುಮತ್ತೆ ಬಂದು ಹೇಳುವ ಕಥೆ ವ್ಯಥೆಗಳುಬಾಗುವಿಕೆಯಿಲ್ಲದೆ ಕ್ಷೀಣವಾಗುತಿಹ ಭಾವಾನುರಾಗಗಳುಹೀಗೆಯೇ ನಡೆದಿತ್ತು ವರ್ಷಾನುವರ್ಷ ಅದೇ ವಿರಹದ ಸುಳಿಯಲ್ಲಿ ನಲುಗಿನಾನೀಗ ಹಗಲಲಿ ಎಂದೂ ಅರಳದ ವಿರಹಿಣಿ ಯಾರೂ ಸುಳಿಯದ ಕಪ್ಪಿರುಳಿನಲಿಮೊಗ್ಗು ಮನಸು ಹದವಾಗಿ ಒಡೆದುನೆಲದ ಮೇಲುರುಳಿ ಹಗುರಾಗುತ್ತೇನೆಅವ ಬರುವ ವೇಳೆಯಲಿಅದೇನೋ ನೆನೆದು ಬಿದ್ದಲ್ಲೇ ನಗುತ್ತೇನೆ.ನಮ್ಮೀರ್ವರ ಮಾತಿರದ ಮೌನಕೆಒಳಗೊಳಗೆ ಸುಡುವ ಝಳದಲಿ ತೆಳುವಾಗುತ್ತೇನೆ ಅವನೂ ಹಾಗೆಯೇ ಕಂಡೂ ಕಾಣದಂತೆಮೂಡಣದಿಂದ ಪಡುವಣಕ್ಕೆ ತಿರುಗುತ್ತಲೇ ಇರುತ್ತಾನೆನಾನೂ ನೋಡು ನೋಡುತ್ತಲೇನೆಲದ ಗುಣವನು ಒಪ್ಪಿಕೊಳ್ಳುತ್ತೇನೆಬರುವ ನಾಳೆಯಲಿ ಮತ್ತೆ ಗೆಲುವಾಗಲು ***************************.

ಹಗಲಲಿ ಅರಳದ ವಿರಹಿಣಿ Read Post »

ಕಾವ್ಯಯಾನ

ಎಲ್ಲಾ ಹೆಣ್ಣು ಹೆಣ್ಣು ಹೆಣ್ಣು

ಕವಿತೆ ಎಲ್ಲಾ ಹೆಣ್ಣು ಹೆಣ್ಣು ಹೆಣ್ಣು ಸುಧಾ ಹಡಿನಬಾಳ ಹೇ ದುರುಳ ವಿಕೃತ ಕಾಮಿಗಳೆನಿಮ್ಮ ದಾಹ, ಕ್ರೌರ್ಯಕೆ ಕೊನೆಯಿಲ್ಲವೇನು? ನೀವು ಪೂಜಿಸುವ ಜಗನ್ಮಾತೆ ಹೆಣ್ಣುನಿಮ್ಮ ಹೆತ್ತ ಜನ್ಮದಾತೆ ಹೆಣ್ಣುನಿಮ್ಮ ಪೊರೆವ ಭೂಮಿತಾಯಿ ಹೆಣ್ಣುನಿಮ್ಮ ಮನೆ ಬೆಳಗುವ ಮಡದಿ ಹೆಣ್ಣುಮನೆತುಂಬ ಕಿಲ ಕಿಲ ಗೆಜ್ಜೆನಾದ ಹೆಣ್ಣುಎಲ್ಲಾ ಹೆಣ್ಣು ಹೆಣ್ಣು ಹೆಣ್ಣುಆದರೂ ಅನ್ಯ ಹೆಣ್ಣಿನ ಮೇಲೇಕೆ ನಿಮ್ಮ ಕಣ್ಣು? ಒಮ್ಮೆ ಯೋಚಿಸಿ ಕಲ್ಪಿಸಿಕೊಳ್ಳಿನಿಮಗೂ ಒಬ್ಬ ಹೆಣ್ಣು ಮಗಳಿದ್ದುಅವಳ ಮೇಲೂ ಇಂತದೆ ಭಯಾನಕದೌರ್ಜನ್ಯ, ಕ್ರೌರ್ಯ ನಡೆದರೆಸಹಿಸಲಾದೀತೇ ಊಹಿಸಿಕೊಳ್ಳಲಾದೀತೇ? ಎಲ್ಲಾ ಹೆಣ್ಣು ಮನೆಯ ಮಕ್ಕಳಂತಲ್ಲವೆ?ಸಾಕು ನಿಲಿಸಿ ನಿಮ್ಮ ವಿಲಾಸೀ ಪೌರುಷವತಣಿಸಿಕೊಳ್ಳಿ ಮಡದಿಯಿಂದಲೇ ನಿಮ್ಮ ದಾಹವಬದುಕಲು ಬಿಡಿ ಹೆಣ್ಣು ಸಂಕುಲವಉಳಿಸಿ ಗೌರವಿಸಿ ಅವರ ಸ್ವಾತಂತ್ರ್ಯವ *****************************

ಎಲ್ಲಾ ಹೆಣ್ಣು ಹೆಣ್ಣು ಹೆಣ್ಣು Read Post »

You cannot copy content of this page

Scroll to Top