ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ವರ್ತಮಾನ

ಬರಗೂರರೆಂಬ ಬೆರಗು

ಲೇಖನ ಬರಗೂರರೆಂಬ ಬೆರಗು ಮಮತಾ ಅರಸೀಕೆರೆ ಪ್ರೊ.ಬರಗೂರು ರಾಮಚಂದ್ರಪ್ಪನವರ ಬಗ್ಗೆ ಬರೆಯುವುದೆಂದರೆ ಸಾಗರಕ್ಕೆ ಸೇರುವ ನದಿಗಳನ್ನು ಎಲ್ಲೋ ಕುಳಿತು ಎಣಿಸಿದಂತೆ.ಯಾವುದೇ ಉತ್ಪ್ರೇ  ಕ್ಷೆಯಿಲ್ಲದ ಮಾತುಗಳಿವು ಎಂದು ಅವರನ್ನು ಸನಿಹದಿಂದ ಬಲ್ಲವರಿಗೆಲ್ಲಾ ಚಿರಪರಿಚಿತ.ಅವರ ಹತ್ತು ಹಲವು ಮಜಲುಗಳ ವೈವಿಧ್ಯ ಚಟುವಟಿಕೆಗಳನ್ನು ಸಾಮಾನ್ಯವಾಗಿ ಎಲ್ಲರೂ ಬಲ್ಲರು.ನಾನಿಲ್ಲಿ ಬರಗೂರು ಸರ್ ಬಗ್ಗೆ ಅಕಾಡೆಮಿಕ್‌ ಅಲ್ಲದ ಕೆಲವೇ ಸರಳ ಮಾತುಗಳಲ್ಲಿ ಬರೆಯಲು ಪ್ರಯತ್ನಪಡುವೆ. ಬರಗೂರರನ್ನ ಕಂಡಿದ್ದು ಪತ್ರಿಕೆಗಳಲ್ಲಿ ಅಂಕಣಗಳ ಮೂಲಕ.ಸಾಮಾನ್ಯವಾಗಿ ಆಯ್ದ ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಲೇಖನ, ಅಂಕಣಗಳನ್ನು ತಪ್ಪದೇ ಓದುತ್ತಿದ್ದೆ.ಬಿ.ಆರ್.ಬರಹಗಳನ್ನು ಮೆಚ್ಚುತ್ತಿದ್ದೆ.ನಂತರ ಅಲ್ಲಿಲ್ಲಿ ಜರುಗುವ ಕಾರ್ಯಕ್ರಮಗಳಲ್ಲಿ ದೂರದಿಂದ ಗಮನಿಸಿ ಭಾಷಣಗಳನ್ನು ಆಲಿಸುತ್ತಿದ್ದೆ.ನನ್ನ ವೈಚಾರಿಕ ಗುರುಗಳು ಸ್ವಾಮಿಯವರು ಒಮ್ಮೆ ಬಿ.ಆರ್.ರನ್ನು ತಮ್ಮ ಗುರುಗಳೆಂದೂ, ತಮ್ಮ ಅಧ್ಯಯನದ ಸಲುವಾಗಿ ಅವರು ವಹಿಸುತ್ತಿದ್ದ ವಿಶೇಷ ಆಸಕ್ತಿಯನ್ನು, ಪ್ರೀತಿ ಕಾಳಜಿಯನ್ನೂ ವರ್ಣಿಸಿ ತುಂಬು ಮೆಚ್ಚುಗೆಯಿಂದ ಸ್ಮರಿಸುವಾಗ ಸರ್ ಬಗ್ಗೆ ಮತ್ತಷ್ಟು ಅಭಿಮಾನವಾಯ್ತು. ಸ್ವಾಮಿ ಗುರುಗಳ ದೃಷ್ಟಿಯಲ್ಲಿ ಬರಗೂರರಿಗೆ ವಿಶೇಷ ಸ್ಥಾನಮಾನ. ಅದೇ ಭಾವದ ಮುಂದುವರಿಕೆ ನನ್ನಲ್ಲೂ. ಬಿ.ಆರ್.ಸರ್‌ನ ತೀರಾ ಹತ್ತಿರದಿಂದ ಕಂಡದ್ದು ಶ್ರವಣಬೆಳಗೊಳದಲ್ಲಿ. ನಮ್ಮ ಪರಿಚಯದ ಸ್ನೇಹಿತರೊಬ್ಬರು ಶ್ರವಣಬೆಳಗೊಳದಲ್ಲಿ ಸಿನೆಮಾ ಶೂಟಿಂಗ್ ನೋಡಲು ಆಹ್ವಾನಿಸಿದ್ದರು.ಬರಗೂರರು ಸಿನೆಮಾ ನಿರ್ದೇಶಕರು. ಸ್ನೇಹಿತರೊಂದಿಗೆ ತೆರಳಿ, ಕೆಲವು ಹೊತ್ತು ಅಲ್ಲಿದ್ದು ಸರ್‌ನ ಕೂಡ ಕ್ಲುಪ್ತವಾಗಿ ಮಾತನಾಡಿಸಿ ವಾಪಸ್ ಬಂದ ನೆನಪು. ನಂತರ ಮಾತನಾಡಲು ಸಿಕ್ಕಿದ್ದು ತೀರಾ ಕಡಿಮೆ.ಒಂದೆರಡು ಕಾರ್ಯಕ್ರಮಗಳಲ್ಲಿ ಪರಿಚಯಿಸಿಕೊಂಡಾಗ ಆತ್ಮೀಯವಾಗಿಯೇ ಮಾತನಾಡಿಸಿದರು. ಸಾಂಸ್ಕೃತಿಕ ವಿಷಯಗಳಿಗಾಗಿ ಆಗಾಗ ನಾನು ಮೆಸೇಜ್ ಮಾಡಿದಾಗ ತಪ್ಪದೇ ಉತ್ತರಿಸುವರು.ಶಿಕ್ಷಣ ಇಲಾಖೆಯ ಸುಧಾರಣೆಗೆ ಸಂಬಂಧಿಸಿದಂತೆ ಕೆಲವು ಅಹವಾಲು ಹೊತ್ತು ಡಿ ಎಸ್ ಈ ಆರ್ ಟಿ ಗೆ ತೆರಳಿದ್ದಾಗ ಪುಸ್ತಕ ಕಮಿಟಿ ಅಧ್ಯಕ್ಷರಾಗಿದ್ದ ಅವರು ಸುಮಾರು ಅವಧಿಯ ಕಾಲ ನಮ್ಮೊಂದಿಗೆ ಮಾತನಾಡಿ ಸಹನೆಯಿಂದ ಆಲಿಸಿ ಸೂಕ್ತ ಪ್ರತಿಕ್ರಿಯೆ ನೀಡಿದಾಗ ಅವರ ಸರಳತೆ, ಸಹೃದಯತೆ ಕಾಳಜಿ ಬಗ್ಗೆ ಖುಷಿಯಾಗಿತ್ತು.ಕೆಲವು ದಿನಗಳ ನಂತರ ಡಿ.ಎಸ್.ಈ.ಆರ್.ಟಿಯಲ್ಲಿಯೇ ಒಂದು ಕಾರ್ಯಕ್ರಮ ಆಯೋಜಿಸಿ ಪಠ್ಯಪುಸ್ತಕಕ್ಕೆ ಸಂಬಂಧಿಸಿದಂತೆ, ಗ್ರಂಥಾಲಯ ಸುಧಾರಣೆ ಕುರಿತಂತೆ ಸಲಹೆ ಸೂಚನೆ ನೀಡಲು ಬರಹಗಾರ ಶಿಕ್ಷಕರನ್ನು ಆಹ್ವಾನಿಸಿದ್ದರು.ಪಠ್ಯಪುಸ್ತಕ ಕಮಿಟಿಯಲ್ಲಿ ಬರಹಗಾರರಿದ್ದರೆ ಅದರ ಸ್ವರೂಪ ಮತ್ತಷ್ಟು ಉತ್ತಮವಾಗುತ್ತಿತ್ತೇನೋ ಎಂದ ಅವರ ದೂರದರ್ಶಿತ್ವದ ಮಾತಿನ್ನೂ ನನಗೆ ನೆನಪಿದೆ. ಸಾಂಸ್ಕೃತಿಕ ನೀತಿಯ ವರದಿಯನ್ನು ಸಿದ್ದಪಡಿಸಿದ್ದು, ಅದರ ಜಾರಿಗೆ ಸಾಂಸ್ಕೃತಿಕ ವಲಯ ಒತ್ತಾಯಿಸುತ್ತಿದ್ದುದನ್ನು ಗಮನಿಸುತ್ತಿದ್ದೆ. ಮತ್ತು ಆ ಸಂಬಂಧ ಕೆಲವು ಸಂದೇಶ ಕಳಿಸಿದ್ದು ಬಿಟ್ಟರೆ ನಂತರ ಅವರ ಸಿನೆಮಾ ಆರಂಭವಾಗುವಾಗ ಮತ್ತೆ ಮೆಸೇಜ್‌ಗಳು. ಸಾಂಸ್ಕೃತಿಕ ವಲಯದ ಕೆಲವು ಅಸಂಬದ್ಧ ನಿರ್ಣಯಗಳಿಂದ ನಮಗೆ ಹತಾಶೆಯಾದಾಗ ಪುನಃ ಸಂಪರ್ಕ ಮಾಡಿದ್ದೆ.ತಡಮಾಡದೇ ಪ್ರತಿಕ್ರಿಯಿಸುತ್ತಿದ್ದ ಅವರ ಸಂವಹನ ಗುಣ ಭರವಸೆ ತುಂಬುತ್ತಿತ್ತು. ತೀರಾ ಇತ್ತೀಚೆಗೆ ಲಾಕ್‌ಡೌನ್‌ ಆರಂಭವಾದಾಗ ಎಲ್ಲರೂ ಭೀತಿಯಿಂದ ಗೃಹಬಂಧನದ ರುಚಿ ನೋಡುವಂತಾಯಿತು. ಏಕತಾನತೆ ಹಾಗೂ ಕ್ಲೇಷಗಳನ್ನು ತಾತ್ಕಾಲಿಕವಾಗಿ ಮರೆಸುವ ಸಾಧನವಾಗಿ ಬರಹ ನೆರವಿಗೆ ಬಂದು ಒಂದಷ್ಟು ಕವಿತೆ ಬರೆದು ಹಿರಿಯ ಲೇಖಕರಿಗೆ ಕಳಿಸುವಾಗ ಬಿ.ಆರ್.ಸರ್ ಗು ಕಳಿಸಿದೆ. ಸಕಾರಾತ್ಮಕ ಸ್ಪಂದನೆಯಿಂದ ಹುರಿಗೊಂಡೆ.ಅದೇ ವೇಳೆಗೆ ಕೋಲಾರದ ಗೆಳೆಯರ ಯೋಜನೆಯೊಂದಕ್ಕೆ ಬರಗೂರರನ್ನ ಯೂಟ್ಯೂಬ್  ಚಾನಲ್ ಗೆ ಮೌಖಿಕವಾಗಿ ಪರಿಚಯಿಸುವ ಸದಾವಕಾಶ ದಕ್ಕಿತು. ಆ ಸಂದರ್ಭದಲ್ಲಿ ಅವರ ಕುರಿತು ಮತ್ತಷ್ಟು ತಿಳಿಯುವ ಸಲುವಾಗಿ  ಅಂತರ್ಜಾಲ ತಡಕಾಡುವಾಗ ದಕ್ಕಿದ್ದು ಅಪಾರ ಸಾಮಗ್ರಿ . ಅಲ್ಲಿಂದ ಶುರುವಾಯಿತು ನನ್ನ ಹುಡುಕುವಿಕೆ.ಅದೆಷ್ಟೊಂದು ದಾಖಲೆಗಳು.ಯೂಟೂಬ್ , ಪತ್ರಿಕೆ, ವಿಕಿಪಿಡಿಯಾದಲ್ಲೆಲ್ಲೆಲ್ಲಾ ಬಹಳಷ್ಟು ಮಾಹಿತಿಗಳು. ಓದುತ್ತಾ, ನೋಡುತ್ತಾ ಅವುಗಳಲ್ಲಿ ಕೆಲವು ತಪ್ಪಿಹೋದಾವೆಂದು ಎಚ್ಚರ ವಹಿಸುವಾಗ ಎಫ್.ಬಿ. ಪೇಜ್‌ ತೆರೆದು ಅಲ್ಲಿ ಸಂಗ್ರಹಿಸುತ್ತಾ ಹೋದೆ. ಅವರ ಸಾಮಾಜಿಕ ತುಡಿತ, ಸ್ಪಂದನೆ ಇಷ್ಟವಾಗುತ್ತ ಮತ್ತಷ್ಟು ಮಗದಷ್ಟು ಅಭಿಮಾನಿಯಾದೆ. ಸಮಾಜವನ್ನು,ತನ್ನ ಸುತ್ತಲಿನ ಪ್ರತೀ ಸಂದರ್ಭವನ್ನು ಕುರಿತು ಅವರ ಅಪೂರ್ವ ಒಳನೋಟವುಳ್ಳ ಗ್ರಹಿಕೆ, ಆ ಅರಿವಿನ ವಿಸ್ತಾರ, ಓದಿನ ವ್ಯಾಪ್ತಿ, ಮುಂದ್ಗಾಣಿಕೆ, ಮುಂದಾಲೋಚನೆ ದೂರದೃಷ್ಟಿಯ ಮಾತುಗಳು ನನಗೆ ಬೇರೆಯದೇ ವಿಶ್ವವನ್ನು ಮನಗಾಣಿಸತೊಡಗಿದವು. ಪ್ರತೀ ಕದಲಿಕೆಯನ್ನು ಅವರು ಕಾಣುವ ರೀತಿ, ವಿಮರ್ಶಿಸುವ ಪರಿ, ವಿಶಿಷ್ಟ ಆಯ್ಕೆ, ವಸ್ತು, ಘಟನೆ, ವಾತಾವರಣ, ಮೊದಲಾದವನ್ನ ಕಾಣಬೇಕಾದ ನೋಟದ ಪರಿಚಯ, ಮೊದಲಾದವುಗಳಲ್ಲಿ ಅವರಿಗೆ ಅವರೇ ಸಾಟಿ. ಸೂಕ್ಷ್ಮಾತಿಸೂಕ್ಷ್ಮ ಸ್ವಭಾವದ ಮೇಷ್ಟ್ರು ಎಳೆ ಗರಿಕೆಯ ಚಲನೆಯಲ್ಲೂ ಅದ್ಭುತವನ್ನು ಕಾಣಬಲ್ಲರು.ಕೂದಲು ಸೀಳಿದಂತಹ ಆಂತರಿಕ ಅವಲೋಕನದ ತಾಕತ್ತು ಅವರ ಅಗಾಧ ಶಕ್ತಿ.ಇಷ್ಟೆಲ್ಲ ವಿಷಯವನ್ನ ಅಂತರ್ಜಾಲದ ಮೂಲಕ ಮಾತ್ರ ಪಡೆದ ನನಗೆ ಅವರ ಶಿಷ್ಯ ವರ್ಗದವರ ಮೇಲೆ ಅಸೂಯೆಯಾಗಿದ್ದಂತೂ ಖರೆ.ಯುವ ಸಮುದಾಯವನ್ನು, ಯುವ ಪೀಳಿಗೆಯನ್ನು ಬಿ.ಆರ್.ಸರ್ ಪ್ರೋತ್ಸಾಹಿಸುವ ಪರಿಯ ಬಗ್ಗೆ ಅವರ ಆತ್ಮೀಯರಿಂದಲೇ ತಿಳಿಯಬೇಕು.ಅವರಿಂದ ಸಹಾಯ ಸಹಕಾರ ಪಡೆದಿರುವ ಅಪಾರ ಶಿಷ್ಯ ಬಳಗದ ದಂಡೇ ಇದೆ. ಯೂಟೂಬಿನಲ್ಲಿ ಅವರ ಹಾಗೂ ಅವರ ಪತ್ನಿಯವರ ಆತಿಥ್ಯ ಸತ್ಕಾರಗಳ ಬಗ್ಗೆ ತಿಳಿದು ಅಚ್ಚರಿಯಾಗಿತ್ತು. ಚಳುವಳಿ, ಸಂಘಟನೆ ಸಾಮಾಜಿಕವಾಗಿ ತೊಡಗಿಸಿಕೊಂಡವರಿಗೆ ಸೃಜನಾತ್ಮಕತೆ ಸಾಧ್ಯವಿಲ್ಲ ಎಂಬುದೊಂದು ಮಾತಿದೆ.ಅದನ್ನ ಸಾರಾಸಗಟಾಗಿ ಸುಳ್ಳು ಎಂದು ಪ್ರತಿಪಾದಿಸಿದವರು ಮೇಷ್ಟ್ರು.ಸಂವೇದನಾಶೀಲ ಬರಹಗಳ ಮೂಲಕ ಎಲ್ಲವನ್ನೂ ಸಮತೂಗಿಸಿ ತೋರಿಸಿದವರು. ಪದ್ಯಗಳ ಮೂಲಕವೂ ನವಿರುತನವನ್ನು ಸೊಗಸಾಗಿ ನಿರೂಪಿಸಿದವರು.ಒಂದು ವಿಷಯವನ್ನು ವಿಂಗಡಿಸಿ ವಿಶ್ಲೇಷಿಸುವುದರ ಮೂಲಕ ಆವಾಹಿಸಿಕೊಳ್ಳುವ ಮಾರ್ಗಗಳನ್ನು ಪರಿಚಯಿಸಿದವರು. ನಾಣೊಂದು ಪದ್ಯದಲ್ಲಿ ಕೊಂಚ ಸಂಘರ್ಷವನ್ನು ಅಡಕಗೊಳಿಸಿದಾಗ ‘ ಸಂವಹನ ಬೀದಿಯಲ್ಲಿ ನಿಂತು ಜಗಳವಾಡಿದಂತಿರಬಾರದು’ಎಂಬ ಮಾತಿನ ಮೂಲಕ ನಯವಾದ ಮಾತಿನ ಪೆಟ್ಟು ಕೊಟ್ಟು ತಿದ್ದಿದವರು.ಸಿನೆಮಾ ಮಾಧ್ಯಮದ ಮೂಲಕ ಅವರು ಸಾಧಿಸಿದ್ದು ಬಹಳ.ಕಲಾತ್ಮಕತೆ ಮೂಲಕ ಸದಭಿರುಚಿಯನ್ನು ಯಥೇಚ್ಚವಾಗಿ ಹಂಚಿದವರು. ಒಂದೊಂದು ಸಿನೆಮಾವು ಕ್ಲಾಸಿಕ್.ಸಾಹಿತ್ಯ ಅಕಾಡೆಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅವರ ಸಾಕಷ್ಟು ಕೆಲಸಗಳು ಇಂದಿಗೂ ಜನಜನಿತ.ಅವರ ಕತೆಗಳು, ಕವನಗಳು, ಅಂಕಣ ಬರಹಗಳು, ಕಾದಂಬರಿಗಳನ್ನು ಓದುವಾಗಅವರ ಸಂಪೂರ್ಣ ನಿಲುವು ಖಚಿವಾಗುತ್ತದೆ.ಬದ್ಧತೆ, ತಲ್ಲೀನತೆಗೆ ಅವರೇ ಮಾದರಿ.ವಿವಿಧ ಕ್ಷೇತ್ರಗಳಲ್ಲಿ ವೈವಿಧ್ಯತೆಯನ್ನು ಕಾಣಿಸಿದ ಅವರು ತೊಡಗಿಕೊಳ್ಳದ ಕ್ಷೇತ್ರಗಳೇ ಇಲ್ಲವೆನ್ನುವಷ್ಟು ಸಾಧಿಸಿದವರು. ಸ್ವತಃ ಪ್ರಾಧ್ಯಾಪಕರಾಗಿದ್ದು, ಈಗಲೂ  ಶೈಕ್ಷಣಿಕ ಸವಾಲುಗಳಿಗೆ ಸಕಾಲದಲ್ಲಿ ಧಾವಿಸಿ ನೀಡುವ ಸಲಹೆಗಳು, ರಾಜಕೀಯವಾಗಿ ಒದಗಿಸುವ ಮಾರ್ಗದರ್ಶನಗಳು ಮುತ್ಸದ್ದಿಯ ಅಸಾಧಾರಣಗುಣದವು. ಇಷ್ಟೆಲ್ಲಾ ಜ್ಞಾನ ದಕ್ಕಿದ್ದೂ ಕೂಡ ಪತ್ರಿಕೆ ಮತ್ತು ಅಂತರ್ಜಾಲದಲ್ಲಿಯೇ.ಇಷ್ಟೆಲ್ಲ ಹೇಳಲು ಅರ್ಹತೆಯಿದೆಯೋ ಇಲ್ಲವೋ,  ಸಂಕೋಚ ಮುಜುಗರದಿಂದಲೇ ಹೇಳಬೇಕಾಯಿತು. ಗ್ರಾಮೀಣ ಹಿನ್ನೆಲೆಯಿಂದ ಬದುಕನ್ನು ರೂಪಿಸಿಕೊಂಡು, ಸತತ ಪ್ರಯತ್ನ ಹಾಗೂ ನಿರಂತರ ಬದ್ಧತೆಯ ಛಲದ ಮೂಲಕ ಅಸಾಮಾನ್ಯ ಚಿಂತಕರಾದ, ಸಾಂಸ್ಕೃತಿಕ ಚಾಲಕರಾದ ಬಿ.ಆರ್.ಮೇಷ್ಟು ಜನ್ಮದಿನ ಅಕ್ಟೋಬರ್ ತಿಂಗಳಿನಲ್ಲಿಯೇ ಬರುತ್ತದೆ. ಈ ಹಿಂದೆ ಅವರ ಬಳಗ ಏರ್ಪಡಿಸಿದ್ದ ‘ಬರಗೂರು-೭೦, ವಿಚಾರ ಸಂಕಿರಣ’ ದಲ್ಲಿ ಪಾಲ್ಗೊಂಡ ಖುಷಿ ನನ್ನದು.ಈಗಲೂ ಇದೇ ಅಕ್ಟೋಬರ್ ೨೯ ರಂದು ಬೆಳಗ್ಗೆ ಅವರ ಶಿಷ್ಯವರ್ಗ ರಾಷ್ಟ್ರೀಯ ವೆಬಿನಾರ್‌ ಆಯೋಜಿಸಿ ಗುರುಗಳ ಬಗ್ಗೆ ಹಿರಿಯ ಲೇಖಕರಿಂದ ಮಾತನಾಡಿಸಲಿದ್ದಾರೆ.ಶೀರ್ಷಿಕೆ- ನಮ್ಮ ಮೇಷ್ಟ್ರು, ನಮ್ಮ ಹೆಮ್ಮೆ. ಹೆಮ್ಮೆಯ ಸಂಗತಿಯೇ. ಬರಗೂರರ ಬಳಗ, ಅಭಿಮಾನಿಗಳು, ಅವರ ಅನುಯಾಯಿಗಳ ಸಂಖ್ಯೆ ಅಪಾರ. ಅವರ ಕುರಿತು ಅದೆಷ್ಟೋ ಪಿ.ಎಚ್.ಡಿ.ಗಳಾಗಿವೆ. ಬರಹಗಳು, ಲೇಖನಗಳು ಬಂದಿವೆ. ಆ ಮಟ್ಟಕ್ಕಲ್ಲದಿದರೂ ಕಿರು ಅಭಿಮಾನಿಯಾಗಿ ಅಕ್ಷರಗಳಲ್ಲಿ ಹಿಡಿಯಲು ಸಾಧ್ಯವಾಗದೆ ಕೆಲವೇ ಪದಗಳಲ್ಲಿ ಗ್ರಹಿಕೆಗೆ ದಕ್ಕಿದಂತೆ ದಾಖಲಿಸಲು ಯತ್ನಿಸಿರುವೆ. ************************************** ಫೋಟೊ ಆಲ್ಬಂ

ಬರಗೂರರೆಂಬ ಬೆರಗು Read Post »

ಕಾವ್ಯಯಾನ

ಪ್ರಕೃತಿ

ಕವಿತೆ ಪ್ರಕೃತಿ ಭಾಗ್ಯ ಸಿ ಮನುಜ ಜೀವನದ ಅವಿಭಾಜ್ಯ ಅಂಗ ಪ್ರಕೃತಿಜತನದಲಿ ಕಾಪಾಡಿಕೊಳ್ಳುವುದಾಗಬೇಕು ನಮ್ಮ ಪ್ರವೃತ್ತಿಗಾಳಿ,ಬೆಳಕು,ನೀರು ಎಲ್ಲಾ ಪ್ರಕೃತಿಯ ಒಡಲಲಿ ನಗುತಿರೆಮನುಜನ ಜೀವನವು ವಜ್ರದಂತೆ ಹೊಳೆಯುತ್ತಿರೆ ವಿಪರೀತ ಬಯಕೆಗೆ ಪರಿಸರ ಬಲಿಪ್ರಾಣಿ ಪಕ್ಷಿಗಳ ಆಸರೆಗಿಟ್ಟ ಕೊಡಲಿಸಣ್ಣ ಮಳೆಗೂ ಕುಸಿಯುತ್ತಿದೆ ಬೆಟ್ಟ ಗುಡ್ಡಜಲಪ್ರಳಯ, ಚಂಡಮಾರುತ ಸೀಳಿದೆ ಅಡ್ಡಡ್ಡ ಬಳಲಿಕೆ ನಿವಾರಣೆಗೆ ಬೇಕು ನೀರುಪಂಚಭೂತಗಳ ನಿರ್ವಹಣೆ ಹೊತ್ತವರಾರುಪ್ರಕೃತಿಯ ಒಡಲ ಸೀಳಿ ತಲೆಯೆತ್ತಿವೆ ಕಟ್ಟಡಗಳುಅವೈಜ್ಞಾನದ ಫಲವಾಗಿ ಉರುಳುತ್ತಿವೆ ತಲೆಗಳು ಅಪ್ಪಿಕೋ ಚಳುವಳಿಯ ರೂವಾರಿ ತಾಯಿಹದಿನೇಳನೆ ಶತಮಾನದ ಅಮೃತಾದೇವಿ ಬಿಷ್ಣೋಯಿಅಧಿಕಾರವಲ್ಲ ಅಸ್ತಿತ್ವವಿದೆ ನಮಗೆ ಪ್ರಕೃತಿಯೊಂದಿಗೆಸಂದೇಶ ಬಿಟ್ಟಿದ್ದಾರೆ ಪ್ರಾಣ ತ್ಯಾಗದೊಂದಿಗೆ ಅರಿಯಬೇಕಿದೆ ಜೋಧಪುರದ ಹೆಣ್ಣು ಮಗಳ ಕಾಳಜಿಯನ್ನುವ್ಯರ್ಥವಾಗಲು ಬಿಡಬಾರದು ಬಿಷ್ಣೋಯಿ ಜನರ ತ್ಯಾಗವನ್ನುಓ ವಿಶ್ವ ಮಾನವರೆ ಸಿದ್ದರಾಗಿ ಪೋಷಿಸಲು ನೀವಿನ್ನುಸೃಷ್ಠಿಯ ವಿಶೇಷವಾದ ಚರಾಚರ ಚೈತನ್ಯವನ್ನು **********************************************************

ಪ್ರಕೃತಿ Read Post »

ಕಾವ್ಯಯಾನ

ನಕ್ಷತ್ರ ನೆಲಹಾಸು

ಕವಿತೆ ನಕ್ಷತ್ರ ನೆಲಹಾಸು ಸ್ವಭಾವ ಕೋಳಗುಂದ ನಕ್ಷತ್ರಗಳ ಹಾದಿಗುಂಟ ಹಾಸಿಸಿಂಗರಿಸಿ ನಿನ್ನ ಕೊಳಲ ಪಾದನೆನಪಿನೆದೆಯ ತುಳಿಯಲಾಶಿಸಿದೆ ಅರ್ಧ ಕತ್ತಲಲಿ ಎದ್ದು ಹೊರಟುನಿನ್ನ ತಬ್ಬಲಿ ಮಾಡಿನಾ ಬುದ್ಧನಾಗಲಾರೆ ಈ ಹಾದಿಗಳೆಲ್ಲಾಎಷ್ಟೊಂದು ಆಮಿಷ ಒಡ್ಡುತ್ತಿವೆಹೃದಯ ಬಂಧಿಯ ಮುಕ್ತಿಗಾಗಿ ನನ್ನೊಳಗಿನ ಸೀತಾಮೀನ ಮೊಟ್ಟೆಯ ಕಾವಲಲಿಸಾವಿರ ಸಂತತಿಯ ಬೆಳಕು ನನ್ನ ಅಸ್ತಿತ್ವದ ಬಿಂದುವಿಗೆನಿನ್ನೊಲವಿನ ಮೊಲೆಹಾಲ ಸ್ಪುರಣಭರವಸೆಯ ಮುತ್ತ ಮಣಿಹಾರ ಹಿಮ ಮಣಿಯ ಮರಳಿನಮರೀಚಿಕೆಯ ಸಾಗರಪಾರಿಜಾತದ ಪರಿಮಳದ ಸಂದೇಶ ಹನಿ ಬೀಜಕ್ಕೆ ಸಾವಿರ ಸಂತಾನನೆಲದ ನಾಲಗೆಯಲಿಸಾವಿನ ಸಂಚಾರಿ ಹಸಿ ಮಣ್ಣ ಮೈಯೊಳಗೆಕನಸ ಕಲ್ಪನೆಯ ಕೂಸುಬಿತ್ತಿ ನಡೆದು ಬಿಡು ನಕ್ಷತ್ರದ ನೆಲಹಾಸು *********************

ನಕ್ಷತ್ರ ನೆಲಹಾಸು Read Post »

ಇತರೆ, ಜೀವನ

ಹೀಗೇಕೆ ನನ್ನವ್ವ ?

ಲೇಖನ ಹೀಗೇಕೆ ನನ್ನವ್ವ ? ಸುಮಾ ಆನಂದರಾವ್       ಇಂದೇಕೆ ನನ್ನವ್ವ ಪದೇ ಪದೇ ನೆನಪಾಗುತ್ತಿದ್ದಾಳೆ? ಅವಳೇಕೆ ಹಾಗಿದ್ದಳು?                  ಜೆರ್ಮನಿಯಲ್ಲಿ  ಒಬ್ಬ  ವಯೋ ವೃದ್ಧೆಯ ಪರಿಚಯವಾದಂದಿನಿಂದ ಗಮನಿಸುತ್ತಿದ್ದೇನೆ.  ಅವಳ ದಿಟ್ಟತನ ಅಚ್ಚರಿ ಉಂಟುಮಾಡುತ್ತಿದೆ. ಅವಳು ತನ್ನೆಲ್ಲಾ  ಕರ್ತವ್ಯ ಮುಗಿಸಿದ್ದಳು, ಮಕ್ಕಳನ್ನು ಓದಿಸಿ ಅವರ ಕಾಲಮೇಲೆ ಅವರು ನಿಲ್ಲುವ ಹಾಗೆ ಮಾಡಿದ್ದಾಳೆ. ಆಗಾಗ ಮಕ್ಕಳು ಬಂದು ಹೋಗುತ್ತಿರುತ್ತಾರೆ. ತೊಂಬತ್ತು ವರ್ಷಆದರೂ ತನ್ನ ಕೆಲಸ ತಾನೇ ಮಾಡಿಕೊಳ್ಳುತ್ತಾಳೆ, ಕೈಯಲ್ಲಿ ಕೋಲು  ಹಿಡಿದು ಸಣ್ಣ ನೂಕುವ ಗಾಡಿಯಲ್ಲಿ ಅಗತ್ಯ ವಸ್ತುಗಳನ್ನು ಕೊಂಡು ತರುತ್ತಾಳೆ, ಇಲ್ಲಿ ಬಹಳಷ್ಟು ವಯಸ್ಸಾದವರು ನಡೆದೇ ಹೋಗುತ್ತಿರುತ್ತಾರೆ. ಅವರೆಲ್ಲರೂ ಬೈಸಿಕಲ್ ತುಳಿಯುವ ಪರಿ ನೋಡಿದರೆ ಗೊತ್ತಾಗುತ್ತದೆ ,  ಇದೆಲ್ಲ ಅವರಿಗೆ ಚಿಕ್ಕಂದಿನ ಅಭ್ಯಾಸ ಎಂದು. ಮೊಮ್ಮಕ್ಕಳನ್ನು ಅಜ್ಜ ಅಜ್ಜಿಯರು ಸುತ್ತಾಟಕ್ಕೆ ಕರೆದುಕೊಂಡು ಹೋಗಿ ಅಲ್ಲಿಯ ವಿಷಯಗಳನ್ನು ತಿಳಿಸುವ ಪರಿ ಬೆರಗು ಮೂಡಿಸುತ್ತದೆ. ಇಲ್ಲಿಯ ಸರಕಾರ ನಿವೃತ್ತಿ ವೇತನ ಕೈತುಂಬ ಕೊಡುತ್ತಾರೆ, ಅಂತೇಲೆವಯಸ್ಸಾದವರು  ಕಣ್ಣಗೆ ಕಂಡ ಬಟ್ಟೆ ತೊಟ್ಟು ಸಂತಸದಿಂದ ಉತ್ಸಾಹವಾದ ಜೀವನ ನಡೆಸುತ್ತಾರೆ. ಅವರಲ್ಲೂ ಮಮಕಾರಗಳು, ಅನುಬಂಧಗಳಿವೆ. ಮಕ್ಕಳು ಮೊಮ್ಮಕ್ಕಳು, ಅಕ್ಕ ತಂಗಿ ಹೀಗೆ ಸಂಬಂಧಗಳು ಗಟ್ಟಿಯಾಗಿರುತ್ತವೆ ಎಂದು ತಿಳಿದದ್ದು ಆ ಜರ್ಮನ್ ಮಹಿಳೆಯಿಂದ. ಆಕೆಗೆ ಬದುಕನ್ನು ಎದುರಿಸುವ ರೀತಿಯನ್ನು ಅವರಮ್ಮ ” ಕ್ರಿಸ್ಟಿನಾ”  ಹೇಳಿಕೊಟ್ಟಳಂತೆ.               ” ಕ್ರಿಸ್ಟಿನಾ” ಆಕೆಯ ಫೋಟೋ ನೋಡಿದಾಗ ತಟ್ಟನೆ ನನಗೆ ನನ್ನವ್ವ ನೆನಪಾದಳು. ಈಗ್ಗೆ ಆಕೆ ಇದ್ದರೆ ೧೩೦ ವರ್ಷ. ಬಹುಶಃ ನನ್ನವ್ವನ ಆಸುಪಾಸಿನವಳೇ. ಕ್ರಿಸ್ಟಿನಾ ಎಷ್ಟು ಚೆಂದ ಇದ್ದಾಳೆ! ಆಧುನಿಕ ಮಹಿಳೆಯಂತೆ ಅಲಂಕಾರ! ವಿದ್ಯಾವಂತಳು, ವಿಜ್ಜ್ನಾನಿ,  ಸಬಲೆ. ಇಲ್ಲಿ ಹೆಣ್ಣುಮಕ್ಕಳಿಗೆ ಶತ ಶತಮಾನಗಳಿಂದಲೂ ಸಮಾನತೆ, ಸ್ವತಂತ್ರತೆಯ ಹಕ್ಕು ಇತ್ತು. ಆದರೆ ನನ್ನವ್ವ ಏಕೆ ಹಾಗಿದ್ದಳು?               ಅವ್ವ ಎಂದರೆ ನಮ್ಮ ತಂದೆಯ ತಾಯಿ ಹನುಮಕ್ಕ. ಅವಳದು ನಾಗಸಮುದ್ರ ತವರು ಮನೆ, ಗಂಡನ ಮನೆ ಸಂಡೂರು ತಾಲೂಕಿನ ಬಂಡ್ರಿ . ಆಕೆಗೆ ಐದು ಗಂಡುಮಕ್ಕಳು ಎರೆಡು ಹೆಣ್ಣು ಮಕ್ಕಳು. ತುಂಬು ಕುಟುಂಬ, ಗಂಡ ಶಾನುಭೋಗರು ರಾಘಪ್ಪ ದತ್ತು ಪುತ್ರ. ಆತನ ಅಜ್ಜಿಪುಟ್ಟಮ್ಮ ಮಗಳ ಮಗ ಅಂದರೆ  ಮೊಮ್ಮಗನನ್ನು ತನ್ನ ಸಮಸ್ತ ಆಸ್ತಿಗೂ ವಾರಸುದಾರನನ್ನಾಗಿ ಮಾಡಿದ್ದಳು.               ನನ್ನವ್ವ ಹನುಮಕ್ಕನಿಗೆ  ಕೊನೆಯ ಮಗ ನಮ್ಮಪ್ಪ.  ಹಾಗಾಗಿ ಅವ್ವನಿಗೆ ವಯಸ್ಸಾಗಿತ್ತು. ನಾನು ಹನ್ನೆರೆಡು ವಯಸ್ಸಿಗೆ ಬರುವವರೆಗೂ ಮಾತ್ರ ಇದ್ದಳು. ತಂಗಿ ತಮ್ಮಂದಿರು ಹುಟ್ಟುವವರೆಗೂ ಅವ್ವನೇ ಗೆಳತಿ. ನನ್ನಮ್ಮ , ಅವ್ವನಿಗೆ ತಮ್ಮನ ಮಗಳು ಸೋದರ ಸೊಸೆಯನ್ನೇ ಮಗನಿಗೆ ತಂದುಕೊಂಡಿದ್ದಳು. ಅವ್ವ  ಒಳ್ಳೆಯ ಬಣ್ಣ. ಉದ್ದನೆಯ ಮೂಗು, ಪುಟ್ಟ ಬಾಯಿ  ನಿಜಕ್ಕೂ ಸುಂದರಿ. ಆದರೆ ಮಡಿ ಹೆಂಗಸು. ಅಂತಹವರು ಉಡುವ ಸೀರೆಗಳು ಬೇರೆ ರೀತಿಯೇ ಇರುತ್ತಿದ್ದವು . ಯಾವಾಗಲು ಸೆರಗು ಹೊದ್ದು ತಲೆ ಮುಚ್ಚಿಕೊಂಡಿರುತ್ತಿದ್ದಳು .  ನಾನು ಅವ್ವನ ಪಕ್ಕ ಮಲಗುತ್ತಿದ್ದೆ ರಾತ್ರಿ ಹೊತ್ತು ಅವಳನ್ನು ಹತ್ತಿರದಿಂದ ನೋಡಿ ನನ್ನ ಮುಗ್ದ ಮನಸ್ಸಿಗೆ ನೂರಾರು ಯೋಚನೆ ಬರುತ್ತಿತ್ತು. ಅವ್ವನೇಕೆ ಎಲ್ಲರಹಾಗಿಲ್ಲ?               ಅವಳ ಆ ವಿರೂಪವು ಪ್ರಶ್ನಾರ್ಥಕ ಚಿನ್ಹೆ ಯಾಗಿರುತ್ತಿತ್ತು. ಒಂದೊಮ್ಮೆ ನಾನು ”ಅವ್ವ ನೀ ಹೀಗೇಕೆ? ಎಲ್ಲರಂತೇಕಿಲ್ಲ? ಎಂದಾಗ ಏನು ಹೇಳದೆ ಕಣ್ಣ ತುಂಬ ನೀರು ತುಂಬಿದಳು. ಅದೆಷ್ಟು ನೋವನುಂಗಿದ್ದಳೋ ಕಣ್ಣೀರನ್ನು ಹೊರಗೆ ಬಿಡದೆ ತಡೆಯುತ್ತಿದ್ದುದು ಕಣ್ಣಿಗೆ ಕಟ್ಟಿದಂತಿದೆ. ನನಗೆ ಅವ್ವನ ಮೇಲೆ ಅಪಾರ ಪ್ರೀತಿ. ಪ್ರತಿದಿನ ರಾತ್ರಿ ನನ್ನ  ತಲೆಸವರುತ್ತಾ ಬಂಡ್ರಿ  ಕತೆಯನ್ನೆಲ್ಲ ಹೇಳುತ್ತಿದ್ದಳು.               ಬಂಡ್ರಿಯ ಜಮೀನ್ದಾರ  ಸಾಹುಕಾರ ರಾಗಪ್ಪನಿಗೆ ತನ್ನಪ್ಪ ತನ್ನನ್ನು ಮದುವೆ  ಮಾಡಿ ಕೊಟ್ಟಿದ್ದು, ಅಜ್ಜಿ ಮೊಮ್ಮಗ ಇಬ್ಬರೇ ಇದ್ದ ಆ ಮನೆಗೆ ತಾನು ಕಾಲಿಟ್ಟಿದ್ದು, ಆ ಸಿರಿವಂತಿಕೆ, ಮರ್ಯಾದೆ ಎಲ್ಲವನ್ನು ಕಂಡು ಕೊನೆ ಕಾಲಕ್ಕೆ  ಊರಿನ ವ್ಯಾಜ್ಯದಲ್ಲಿ ಮುಗ್ದ ರಾಗಪ್ಪನ ಕರಗಿದ ಆಸ್ತಿ  ಎಲ್ಲವನ್ನು ಸಹಿಸಿ  ಗಟ್ಟಿಯಾದ ಬಂಡೆಯಂತಾಗಿದ್ದಳು ನನ್ನವ್ವ.               ಇಬ್ಬರು ಹೆಣ್ಣುಮಕ್ಕಳಿಗೆ ಮದುವೆ ಮಾಡಿ, ಐದು ಗಂಡುಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ತಮ್ಮ ಕಾಲ ಮೇಲೆ ತಾವು ನಿಲ್ಲುವಂತೆ ಮಾಡಿದ ಚತುರೆ ಅವ್ವ. ಊರಲ್ಲಿ ನಡೆಯುವ ಯಾವ ಕಲುಷಿತ ಗಾಳಿ ತನ್ನ ಮಕ್ಕಳ ಮೇಲೆ ಬೀಳದಂತೆ ತಡೆದು ಅವರನ್ನೆಲ್ಲ ಉಚ್ಛ ಹುದ್ದೆಗೆ ಸೇರಿಸಿದ ಧೈರ್ಯ ಮೆಚ್ಚಲೇಬೇಕು.               ತಾತ ತುಂಬಾ ಮೆದುಸ್ವಭಾವದವರಂತೆ ನಾನು ನೋಡಿರಲಿಲ್ಲ. ನನ್ನಪ್ಪನಿಗೆ ಕೆಲಸ ಸಿಕ್ಕ ಸಂತಸವನ್ನು ಊರೆಲ್ಲ ಹಂಚಿ  ಅಂದೇ ಇಹಲೋಕ ತ್ಯೆಜಿಸಿದರಂತೆ.  ಮಕ್ಕಳಿಗೆ ಹಾಸಿಗೆ ಇದ್ದುದರಲ್ಲಿ ಕಾಲು ಚಾಚು ರೀತಿ ಹೇಳಿಕೊಟ್ಟಿದ್ದು ಅವ್ವ. ಐದು ಜನರು ಒಳ್ಳೆಯ ಹುದ್ದೆಯಲ್ಲಿದ್ದರು. ಅವರ ವಿದ್ಯೆಯೇ ಅವರಿಗೆ ದಾರಿದೀಪವಾಗಿತ್ತು. ಅವ್ವ ಒಂದು ಮಾತು ಹೇಳುತ್ತಾ ಇದ್ದಳು “ಆಸ್ತಿ ಯಾವತ್ತೂ ಶಾಶ್ವತ  ಅಲ್ಲ ವಿದ್ಯೆ ಯಾವತ್ತೂ ಯಾರು ಕಸಿದುಕೊಳ್ಳದ ಆಸ್ತಿ”. ಅವ್ವನಿಗೆ ಆ ಊರು ಅಲ್ಲಿಯ ವ್ಯಾಜ್ಯಗಳು ಎಷ್ಟೊಂದು ಹೈರಾಣಗೊಳಿಸಿತ್ತೆಂದರೆ ತನ್ನ ಮಕ್ಕಳು ಯಾರು ಅಲ್ಲಿ ನೆಲೆಸಿಲ್ಲ ಎಂದು ಯಾವತ್ತೂ  ಕೊರಗುತ್ತಿರಲಿಲ್ಲ. ಬದಲಿಗೆ ಐದು ಜನರು ತಮ್ಮ ಕಾಲ ಮೇಲೆತಾವು ನಿಂತು ಅಚ್ಚುಕಟ್ಟಾಗಿ ಸಂಸಾರ ನಡೆಸುವುದ ಕಂಡು ಹೆಮ್ಮೆಪಟ್ಟುಕೊಳ್ಳುತ್ತಿದ್ದಳು.               ನಾಗಸಮುದ್ರದಿಂದ ನನ್ನವ್ವನ ತಮ್ಮ , ನನ್ನ ಅಮ್ಮನ ತಂದೆ  ತಾತ ಬಂದರೆ ಅಕ್ಕ ತಮ್ಮನ ಮಾತಿನ ಧಾಟಿ, ಉಭಯಕುಶಲೋಪರೀ, ಮಕ್ಕಳ ಬಳಿ ಹೇಳಲಾಗದ್ದನ್ನು ತಮ್ಮನ ಬಳಿ ಹೇಳುವುದು, ತಾತನೋ ಮಗಳು ಮೊಮ್ಮಕ್ಕಳ ಜೊತೆ ಅಕ್ಕನಿಗೂ ತವರು ಮನೆಗೆ ಕರೆದೊಯ್ಯುವುದು ಎಷ್ಟು ಚೆಂದ ಇತ್ತು! ತಾತನ ಪ್ರಭಾವ ಎಷ್ಟಿತ್ತೆಂದರೆ ಅಪ್ಪ ದೊಡ್ಡಪ್ಪಂದಿರೆಲ್ಲ ಅವ್ರಮ್ಮನನ್ನು ತಾತ ಕರೆದಂತೆ ತಾವು ಅಕ್ಕ ಅಂತೇಲೇ ಕರೆಯುತ್ತಿದ್ದರು.               ” ನನ್ನಕ್ಕ ತೆಳ್ಳಗೆ ಬೆಳ್ಳಗೆ ಹಣೆತುಂಬಾ ಕುಂಕುಮ ಇಟ್ಟು, ಜಡೆಹೆಣೆದ ಕೂದಲನ್ನು ತುರುಬು ಕಟ್ಟಿ, ಸಿಹಿ ನೀರ ಬಾವಿಯಿಂದ ತಲೆ ಮೇಲೊಂದು ಕೊಡ ಕೈಯ್ಯಲ್ಲೊಂದು ಕೊಡ ಹಿಡಿದು ಬರುತ್ತಿದ್ದಳು, ಆಗ ಎಷ್ಟು ಗಟ್ಟಿಮುಟ್ಟಾಗಿದ್ದಳು ಬಹಳ ಸುಂದರಿ ” ಎಂದು ತಮ್ಮ ಹೇಳುತ್ತಿದ್ದರೆ ನನ್ನವ್ವ ವಿಷಾದದ ನಗೆ ಬೀರುತ್ತಿದ್ದಳು. ಆ ನಗೆಯ ಹಿಂದೆ ಅದೆಷ್ಟು ನೋವಿತ್ತೋ               ಅವ್ವನಿಗೆ ಯಾರು ಹಾಗಿರಲು ಒತ್ತಾಯಮಾಡಿರಲಿಲ್ಲ, ಅಂದಿನ ಸಮಾಜಕ್ಕೆ ಹೆದರಿಯೋ ತನ್ನ ಗೆಳತಿಯರು ಅಕ್ಕತಂಗಿಯರಂತೆ  ತಾನಿರಬೇಕೆಂಬ ಭ್ರಮೆಯೋ ಒಟ್ಟಿನಲ್ಲಿ ವಿರೂಪಿಯಾಗಿದ್ದಳು.               ಇಂದು ಕ್ರಿಸ್ಟಿನಾಳ ಫೋಟೋ ನೋಡಿದಾಗಿಂದ ಮನದಲ್ಲೇನೋ ಹೊಯ್ದಾಟ. ನನ್ನವ್ವನಲ್ಲೂ ಅವಳಷ್ಟೇ ದಿಟ್ಟತನ, ಮಕ್ಕಳನ್ನು  ಸನ್ಮಾರ್ಗದಿ ಬೆಳೆಸುವ ಅಗಾಧ ಶಕ್ತಿ,ಕಷ್ಟಗಳನ್ನು ಸಹಿಸಿ ಕುಟುಂಬವನ್ನು ಮೇರು ಮಟ್ಟಕ್ಕೆ ತರುವಛಲ ಇವೆಲ್ಲ ಗಮನಿಸಿದಾಗ  ಅವಳೊಬ್ಬ ಕೌಟುಂಬಿಕ ವಿಜ್ಜ್ಞಾನಿಯಾಗಿದ್ದಳಲ್ಲವೇ ? ಮತ್ತೇಕೆ ಅವಳಿಗೆ ಆ ವಿರೂಪ?  ಅದು ಅವಳಿಗೆ ಹಿಡಿದ ಗ್ರಹಣವೇ?  ಗ್ರಹಣವಾಗಿದ್ದರೆ ಬಿಡಬೇಕಿತ್ತಲ್ಲವೇ? ಇಲ್ಲ ಅದು ಶಾಪ ಹೌದು ನನ್ನವ್ವ ಶಾಪಗ್ರಸ್ತೆ. ******************************************

ಹೀಗೇಕೆ ನನ್ನವ್ವ ? Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಅಂಕಣ ಬರಹ ಅಲೆಯ ಮೊರೆತ ಅಲೆಯ ಮೊರೆತ( ಕಾದಂಬರಿ)ತಮಿಳು ಮೂಲ : ಕಲ್ಕಿಅನುವಾದ : ಶಶಿಕಲಾ ರಾಜಪ್ರ : ಸಾಹಿತ್ಯ ಅಕಾಡೆಮಿಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೪೨೦ಪುಟಗಳು : ೬೯೨ ವಾಸ್ತವವಾದಿ ಶೈಲಿಯಲ್ಲಿರುವ ಈ ಕಾದಂಬರಿಯು ಒಂದು ಕಾಲ್ಪನಿಕ ಕಥೆಯನ್ನು ವಸ್ತುವಾಗಿ ಹೊಂದಿದ್ದರೂ  ಭಾರತಕ್ಕೆ ಸ್ವಾತಂತ್ರ್ಯ   ಸಿಗುವ ಮೊದಲು ನಡೆದ ಎಲ್ಲ ಸಂಗತಿಗಳನ್ನೂ ಐತಿಹಾಸಿಕ ಸತ್ಯಗಳೊಂದಿಗೆ ಯಥಾವತ್ತಾಗಿ ನಿರೂಪಿಸುತ್ತದೆ.         ಪಟ್ಟಾಮಣಿಯಮ್ ಕಿಟ್ಟಾವಯ್ಯರ್, ಸರಸ್ವತಿ ಅಮ್ಮಾಳ್, ಪದ್ಮಾಚಲ ಶಾಸ್ತಿç ಅಯ್ಯರ್, ಕಾಮಾಕ್ಷಿ ಅಮ್ಮಾಳ್, ದೊರೆಸ್ವಾಮಿ ಅಯ್ಯರ್, ರಾಜಮ್ಮ, ಲಲಿತಾ, ಸೀತಾ, ಸೌಂದರ್ ರಾಜನ್, ಸೂರ್ಯ, ಪಟ್ಟಾಭಿರಾಮನ್, ಧಾರಿಣಿ, ಅಮರನಾಥ, ಚಿತ್ರಾ ಮೊದಲಾದವು ಇಲ್ಲಿ ಎದ್ದು ಕಾಣುವ ಪಾತ್ರಗಳು. ಇವರೆಲ್ಲರ ವೈಯಕ್ತಿಕ ಹಾಗೂ  ಕೌಟುಂಬಿಕ ಬದುಕಿನ ವಿವರಗಳು , ಗ್ರಾಮೀಣ ಹಾಗೂ ನಗರ ಬದುಕಿನ  ಚಿತ್ರಗಳು, ಸ್ವಾತಂತ್ರ್ಯ  ಹೋರಾಟ, ಬಿಳಿಯರ ಸರಕಾರದ ಆಡಳಿತ ವೃತ್ತಾಂತಗಳು, ಕಾಂಗ್ರೆಸ್ ಮತ್ತು ಸೋಷಲಿಸ್ಟ್  ಸಂಘಟನೆಗಳು ನಡೆಸಿದ ಹೋರಾಟದ ಚಿತ್ರಗಳು ಇಲ್ಲಿವೆ.  ಸರಕಾರದ ದೌರ್ಜನ್ಯದ ವಿರುದ್ಧ ಪ್ರತಿಭಟಿಸುವ ಕ್ರಾಂತಿವೀರ ಯುವಕರು ರಹಸ್ಯವಾಗಿ ನಡೆಸುವ ಸಿದ್ಧತೆಗಳು, ಅವರನ್ನು ಬಂಧಿಸಲು ಪೋಲಿಸರು ನಡೆಸುವ ಪ್ರಯತ್ನಗಳು,  ಬಂಧನ, ಜೈಲುವಾಸ, ಕೈದಿಗಳು ತಪ್ಪಿಸಿಕೊಳ್ಳಲು ಮಾಡುವ ಒದ್ದಾಟಗಳ ಚಿತ್ರಣಗಳಿವೆ.  ಭಾರತದಲ್ಲಿ ಅಸ್ತಿತ್ವದಲ್ಲಿದ್ದ ಸ್ಥಾನೀಯ ರಾಜರುಗಳು ತಮ್ಮ ತಮ್ಮೊಳಗೆ ಕಾದಾಡಿ ಹೊರಗಿನಿಂದ ಮುಸಲ್ಮಾನರೂ ಆಂಗ್ಲರೂ ಬಂದು ಇಲ್ಲಿ ನೆಲೆಯೂರಲು ಕಾರಣರಾದದ್ದು ಹೇಗೆ ಎಂಬ ಬಗ್ಗೆ ಚರ್ಚೆಗಳಿವೆ.  ಮುಸಲ್ಮಾನರ ಆಕ್ರಮಣ, ಆಡಳಿತ ಮತ್ತು ಹಿಂದೂ ಧಾರ್ಮಿಕ ಕೇಂದ್ರಗಳನ್ನು ನಾಶ ಮಾಡಿ ಅವರು ಮಸೀದಿಗಳನ್ನು ಸ್ಥಾಪಿಸಿದ್ದು, ಹಿಂದೂ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿ ಅವರನ್ನು ತಮ್ಮ ಜನಾನಾದಲ್ಲಿರಿಸಿಕೊಂಡದ್ದು, ಬಲಾತ್ಕಾರವಾಗಿ ಮತಾಂತರಗೊಳಿಸಿದ ವಿವರಗಳಿವೆ.  ಇವೆಲ್ಲದರ ಜತೆಗೆ ಬ್ರಿಟಿಷರ ದಾಸ್ಯದಿಂದ ಭಾರತವನ್ನು ಬಂಧಮುಕ್ತಗೊಳಿಸಲು ಉಪವಾಸ ಸತ್ಯಾಗ್ರಹ-ಅಹಿಂಸಾ ವ್ರತಗಳ ಮೂಲಕ ಹೋರಾಟ ನಡೆಸಿದ ಗಾಂಧೀಜಿಯವರ ಬಗ್ಗೆ ಇಲ್ಲಿ ಕೆಲವು ಪಾತ್ರಗಳಿಗೆ ಅಪಾರವಾದ ಭಕ್ತ-ಗೌರವಗಳಿದ್ದರೆ ಇನ್ನು ಕೆಲವು ಪಾತ್ರಗಳಿಗೆ ಅವರಿಂದಾಗಿಯೇ ಭಾರತವು ಎರಡು ಹೋಳಾಗಿ ಬಿಟ್ಟಿತು ಎಂಬ ಅಸಮಾಧಾನ ವ್ಯಕ್ತವಾಗಿದೆ.  ಭಾರತಕ್ಕೆ ಸ್ವಾತಂತ್ರ್ಯ ದೊರಕಿದ ಸಂದರ್ಭದಲ್ಲಿ  ಮುಸಲ್ಮಾನರು ಪ್ರತ್ಯೇಕ ರಾಜ್ಯ ಬೇಕೆಂದು ಕೂಗಿದಾಗ  ಗಾಂಧೀಜಿಯವರು ಅವರನ್ನು ತಡೆಯಲಿಲ್ಲ, ಮತ್ತು ಪಾಕಿಸ್ತಾನದಲ್ಲಿ  ಹಿಂದೂಗಳ ಮೇಲೆ ದೌರ್ಜನ್ಯ ನಡೆದು ಲಕ್ಷ ಲಕ್ಷ ಮಂದಿ ಸಾವಿಗೀಡಾದಾಗ  ಗಾಂಧೀಜಿಯವರು ದೆಹಲಿಯಲ್ಲಿ ಪ್ರೇಮ ಬೋಧನೆ ಮಾಡುತ್ತಿದ್ದರು, ದೆಹಲಿಯಲ್ಲಿದ್ದ ಎಲ್ಲ ಹಿಂದೂ ದೇವಾಲಯಗಳನ್ನು ಮುಸಲ್ಮಾನರು ನಾಶಪಡಿಸಿ ಮಸೀದಿ ಕಟ್ಟಿಸಿದ್ದು ನಿಜವೆಂದು ಗೊತ್ತಿದ್ದರೂ ಹಿಂದೂ ನಿರಾಶ್ರಿತರು ದೆಹಲಿಯ ಮಸೀದಿಗಳಲ್ಲಿ ತಾತ್ಕಾಲಿಕ ನೆಲೆ ಕಂಡುಕೊಳ್ಳಲು ಪ್ರಯತ್ನಿಸಿದಾಗ  ಅವರು ಅದನ್ನು ತಡೆದರು- ಇತ್ಯಾದಿ ಆರೋಪಗಳಿವೆ.     ೬೯೦ ಪುಟಗಳಿರುವ ಈ ಬೃಹತ್ ಕಾದಂಬರಿಯ ಕನ್ನಡ ಅನುವಾದ ಬಹಳ ಸೊಗಸಾಗಿ ಬಂದಿದೆ. ತಮಿಳು ಭಾಷೆಯ ಕೆಲವು ಪದಗಳನ್ನು ಹಾಗೆಯೇ ಉಳಿಸಿಕೊಂಡು ಅವಕ್ಕೆ ಅಡಿ ಟಿಪ್ಪಣಿ ಕೊಟ್ಟದ್ದು ಕನ್ನಡದ ಓದುಗರಿಗೆ ತಮಿಳು ಸಂಸ್ಕೃತಿಯ ಪರಿಚಯ ಮಾಡಿಕೊಳ್ಳುವಲ್ಲಿ  ಉಪಯುಕ್ತವಾಗಿದೆ.  ತಮಿಳಿನ ಕೆಲವು ಗಾದೆ ಮಾತು- ನುಡಿಕಟ್ಟುಗಳಿಗೆ ಸಮಾನಾರ್ಥಕವಾದ ಅಭಿವ್ಯಕ್ತಿಗಳು ಕನ್ನಡದಲ್ಲಿ ಇಲ್ಲದಿದ್ದರೂ ಅವುಗಳನ್ನು ಅಷ್ಟೇ ಪ್ರಾಸಬದ್ಧವಾಗಿ ರಚಿಸಿ ಕನ್ನಡಕ್ಕೆ ಕೊಡುಗೆಯಾಗಿ ನೀಡಿದ್ದು ಸ್ವಾಗತಾರ್ಹ. ಒಟ್ಟಿನಲ್ಲಿ ಇದು ಬಹಳ ಸೃಜನಶೀಲ ಅನುವಾದ. ********************** ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

You cannot copy content of this page

Scroll to Top