ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಎರಡು ಮೊಲೆ ಕರುಳ ಸೆಲೆ

ಕವಿತೆ ಎರಡು ಮೊಲೆ ಕರುಳ ಸೆಲೆ ವಿಶಾಲಾ ಆರಾಧ್ಯ ಮನುಜ ಕುಲವ ಕತ್ತಲಿಂದ ಬೆಳಕಿಗಿತ್ತತೊಡೆಯ ಸೆಲೆಯ ಮಾಯೀ ಕಣಾನವಮಾಸ ಏನೆಂದು ಬಲ್ಲೆಯಾ?ಒಂದೊಂದು ಮಾಸದಲ್ಲೂಒಂದೊಂದು ವೇದನೆಯಗ್ರಹಚಾರವ ಮೀರಿಕೆಸರ ಮುದ್ದೆಗೆ ರೂಹಿತ್ತುಗುಟುಕಿತ್ತ ಕರುಳ ಹೊಕ್ಕುಳು !ಮಾ-ನವರಂಧ್ರದ ನಿನ್ನಧರೆಗಿಳಿಸಿ ಬಸವಳಿದರೂದಣಿವರಿಯದ ಧರಣಿ ಕಣಾ ಹೆಣ್ಣು!!ಪುಣ್ಯ ಕೋಟಿ ಕಾಮಧೇನುಬೀದಿಗಿಳಿದ ಹೋರಿಬಸವನಿಗೆ ಸಮವೇನು?ಹೋಲಿಕೆಯೇ ಗೇಲಿ ಮಾತುಒಂದೇ ಕ್ಷಣ ಬಿತ್ತುವನಿನ್ನ ಗತ್ತಿಗೆಷ್ಟು ಸೊಕ್ಕು?ಒಂದು ಬಸಿರಲುಸಿರುತುಂಬಿ ಕೊಡುವಳೆಲ್ಲರಿಗೂ ಮಿಕ್ಕು!ಒಂದೇ ಕ್ಷಣ ಉರಿದಾರುವಗಂಡೇ ಕೇಳು ದಂಡಧರಣಿಯೋ ಬೂದಿಯೊಳಡಗಿದಮೌನ ಕೆಂಡ ಹಸಿ ಮಾಂಸಮುಕ್ಕುವುದುಸುಲಭ ನಿನ್ನ ದಂಡಕೆ !ಹಲವು ಕೂಸಿಗೊಬ್ಬಳೇಹಾಲನ್ನೀವ ಹೆಣ್ಣಂತೆಎರಡು ಮೊಲೆಯಿವೆಯೇ ಗಂಡಿಗೆ? *****************************

ಎರಡು ಮೊಲೆ ಕರುಳ ಸೆಲೆ Read Post »

ಇತರೆ

ಡಿ.ಎಸ್.ರಾಮಸ್ವಾಮಿ ಕವಿತೆಗಳು ಗೆ; ಕವಿತೆಯ ಮೊಳಕೆಯೊಡೆಸುತ್ತದೆನಿನ್ನದೊಂದು ನಗು, ಸಣ್ಣ ಸಂದೇಶಎಂದಂದು ನಿನ್ನನ್ನು ಮರುಳುಮಾಡುವುದಿಲ್ಲ; ಜೊತೆಗಿರದೆಯೂ ಜೊತೆಗೇ ಇರುವಾಗ.ನಟ್ಟ ನಡುವೆ ಎದ್ದು ಹೋಗುವ ಮಾತಿಗೆಖಬರಿಲ್ಲ, ಅನ್ನುವುದಕ್ಕೆ ಪುರಾವೆ ಯೊದಗಿಸಲಾರೆ, ಬದುಕ ದುರಿತದ ನಡುವೆ.ಆಡದೇ ಉಳಿದ ಮಾತುಗಳು ಎದೆ ತುಂಬಉಳಿದದ್ದಕ್ಕೆ ಸಾಕ್ಷಿ, ಕವಿತೆಯ ಸಾಲುಗಳಲ್ಲಿ ನೀನು, ಪದೇ ಪದೇ ಇಣುಕುತ್ತೀಯ, ಮುಖಾಮುಖಿ-ಯಾಗದೆಯೂ, ಒಳಗೇ ಉಳಿದ ಬೆಳಕು.ಹಂಚಿಕೊಳ್ಳುವುದಕ್ಕೇನು ಉಳಿದಿದೆ ಎನ್ನುವುದೆಲ್ಲ ಬರಿಯ ಒಣ ತರ್ಕದ ದೇಶಾವರಿ ಹೇಳಿಕೆಇಬ್ಬರಿಗಲ್ಲದೇ ಮತ್ತಾರಿಗೂ ಗೊತ್ತಾಗಬಾರದ ಸತ್ಯ.ಹೆಗಲಿಗೊರಗಿ, ಬೆರಳ ಹೆಣೆದು ಅನೂಹ್ಯ ಲೋಕಕ್ಕೆ ಜಾರಿ, ಮನಸ್ಸಲ್ಲೇ ಕೂಡಿದ್ದು, ಮಿಥುನದುದ್ರೇಕಕ್ಕಿಂತಮಿಗಿಲೆಂದು ಗೊತ್ತಾಗಿದ್ದು, ಲೌಕಿಕದ ಎಂಜಲದಾಂಪತ್ಯದ ಗೆರೆ ದಾಟದ ನೈತಿಕದ ಗೆಲುವು. ಭಾವವಿಲ್ಲದ ಕವಿತೆ ಬರಿಯ ಹೇಳಿಕೆಯಾಗುವುದುಲೋಕ ಸತ್ಯದ ಮಾತು. ನೀನು ನೆನಯುವ ಕೃಷ್ಣನನ್ನ ಕಾಡುವ ರಾಧೆ, ಬರಿಯ ಪುರಾಣವೇನಲ್ಲ ನಮ್ಮೊಳಗೇ ಉಳಿದ ಬಾಂಧವ್ಯದ ಸೂನು.ಮುಗಿಲಂಚಿಗೆ ಹೆಣೆದ ಬಣ್ಣ ಬಣ್ಣದ ಕಮಾನು!! ———– ಹೆಣ್ಣು ಮತ್ತು ಹಾಡು ನೇಗಿಲ ಚೂಪಿಗೆ ಸಿಕ್ಕಿದ್ದಕ್ಕೆ ಸೀತೆ ಎಂದವರೇಇವಳು ಜನಕನ ಮಗಳು ಜಾನಕಿ ಎಂದಿರಿ.ಇವಳದಲ್ಲದ ತಪ್ಪಿಗೆ ಬೆಂಕಿಗೆ ಹಾಯುವಾಗಲು ತಡೆಯದವನನ್ನು ಪುರುಷೋತ್ತಮನೆಂದಿರಿ.ತ್ರೇತಾ ಯುಗದ ತಪ್ಪನ್ನು ದ್ವಾಪರಕ್ಕೂ ಮುಟ್ಟಿಸಿ ಪಾಂಚಾಲದಲ್ಲಿ ಹುಟ್ಟಿದುದಕ್ಕೇ ಪಾಂಚಾಲಿದೃಪದನ ಮಗಳಿಗೆ ದ್ರೌಪದಿಯ ಠಸ್ಸೆಯೊತ್ತಿದಿರಿಯಾರ ಮೇಲೆ ಯಾರಿಗೂ ಹಕ್ಕೇ ಇಲ್ಲದಿದ್ದರೂಜೂಜು ಕಟ್ಟೆಯ ಸ್ವತ್ತಾಗಿಸಿ ಲಿಲಾವಿಗಿಟ್ಟುದ್ವಾಪರದ ತಪ್ಪನ್ನು ಕಲಿಗಾಲಕ್ಕೂ ತಂದಿರಿಸಿದಿರಿ ಸೀತೆಯನ್ನು ಗೆಲ್ಲುವ ಮೊದಲೇ ದಾಶರಥಿ ಕಲ್ಲಂತಾಗಿದ್ದ ಅಹಲ್ಯೆಯನ್ನು ಹೂವಾಗಿಸಿದ್ದನ್ನುಸ್ವತಃ ಮರೆತದ್ದಕ್ಕೇ ಇರಬೇಕು, ಕಿಡಿಗೇಡಿಯ ಸಣ್ಣ ಮಾತಿಗೇ ಮತ್ತೆ ಕಾಡಿಗಟ್ಟಿದ ಅವಿವೇಕಹಾಡಂತೆ ಹಾಡುತ್ತಲೇ ಕುಶಲವರು ಗೆದ್ದದ್ದು. ಉಟ್ಟ ಸೀರೆಗೆ ಕೈಯಿಟ್ಟವನನ್ನು ಸುಸ್ತಾಗಿಸಿದ್ದುಕಟ್ಟಿಕೊಂಡವರೇನಲ್ಲ, ಮಾತು ತಪ್ಪದ ಸಖನೇ,ಮುಡಿ ಕಟ್ಟುವುದಿಲ್ಲ ತೊಡೆಮುರಿದ ಹೊರತೂಎಂದವಳು ಅವಳೇನಲ್ಲ,ಯಾರದೋ ಶಪಥಕ್ಕೆಪಗಡೆಯ ದಾಳವಾದದ್ದೂ ಆಕಸ್ಮಿಕವೇನಲ್ಲ, ಯುಗ ಯುಗಗಳ ಆವರ್ತದಲ್ಲೂ ಮತ್ತೆ ವ್ಯಥೆನೆಲವಲ್ಲದೇ ನೇಗಿಲ ಮೊನೆ ಸೀಳೀತೆ ಕಲ್ಲನ್ನುಬಂಡೆಗೆ ತಾಗಿದರೆ ಹಲದ ಹಲ್ಲೂ ಮುರಿದೀತುಅದಕ್ಕೇ ಯಾವತ್ತೂ ಮಿಗದ ಬೇಟೆಯ ನೆವಕ್ಕೆಈ ಇವನ ಕೈಯ ಭರ್ಜಿ,ಈಟಿ, ತಲವಾರುಗಳು. ಯಾವುವೂ ರಕ್ಷಣೆಗೆ ಸ್ವತಃ ನಿಲ್ಲುವುದಿಲ್ಲರಕ್ತದ ಹನಿ ನೆಲಕ್ಕೆ ಬಿದ್ದರೆ ಮತ್ತೆ ಅಸುರ ಶಕ್ತಿಎದ್ದೀತೆಂಬ ಎಚ್ಚರಿಕೆಯಲ್ಲೇ ನಾಲಿಗೆಯ ಹಾಸಿಶಕ್ತಿ ರೂಪಿಣಿಯ ಕೈಯಲ್ಲಿ ಆಯುಧದ ಸಾಲುಬರಿಯ ತೋರಿಕೆಗಲ್ಲ, ಅತ್ಯಗತ್ಯದ ವೇಷ. ತೊಡದೇ ಇದ್ದರೆ ಗೊತ್ತೇ ಆಗುವುದಿಲ್ಲ ಈ ಅವಿವೇಕಿಗಳಿಗೆ. ಇವಳು ತಾಯಿ, ಮಗಳುಅಕ್ಕ ತಂಗಿಯರ ಸಂಬಂಧದಲ್ಲಿ ಸೂಕ್ಷವಾಗಿ. **************************************

Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಅಂಕಣ ಬರಹ ಲೇರಿಯೊಂಕ ಲೇರಿಯೊಂಕ ( ಕಾದಂಬರಿ)ಮೂಲ : ಹೆನ್ರಿ ಆರ್. ಓಲೆ ಕುಲೆಟ್ ಕನ್ನಡಕ್ಕೆ : ಪ್ರಶಾಂತ ಬೀಚಿಪ್ರ : ಛಂದ ಪುಸ್ತಕಪ್ರಕಟಣೆಯ.ವರ್ಷ : ೨೦೦೮ಬೆಲೆ : ರೂ.೧೦೦ಪುಟಗಳು : ೨೫೦  ಕೀನ್ಯಾದ ಹೆಸರಾಂತ ಕಾದಂಬರಿಕಾರ ಹೆನ್ರಿ ಆರ್.ಓಲೆ ಕುಲೆಟ್ ಅವರ ಈ ಕಾದಂಬರಿಯು ಲೇರಿಯೊಂಕ ಎಂಬ ಒಬ್ಬ ದನಗಾಹಿ ಹುಡುಗ ಶಾಲೆಗೆ ಹೋಗಲು ಪಡಬಾರದ ಪಾಡು ಪಟ್ಟು ಕೊನೆಗೆ ಸ್ವಂತ ಪರಿಶ್ರಮದಿಂದ ವಿದ್ಯಾವಂತನಾಗಿ ಸ್ವತಂತ್ರ ಮನೋಭಾವವನ್ನು ಬೆಳೆಸಿಕೊಳ್ಳುವುದರ ಕುರಿತಾದ ಕಥೆಯನ್ನು ಹೇಳುತ್ತದೆ.  ಮಾಸಯಿ ಜನಾಂಗಕ್ಕೆ ಸೇರಿದ ಲೇರಿಯೊಂಕ ಸರಕಾರದ ಒತ್ತಾಯಕ್ಕೊಳಗಾಗಿ ಶಾಲೆಗೆ ಸೇರುತ್ತಾನಾದರೂ ಕಾಲಕ್ರಮೇಣ ಶಾಲೆಯ ಬದುಕನ್ನು ಬಹಳವಾಗಿ ಇಷ್ಟ ಪಡುತ್ತಾನೆ. ವಾಸ್ತವದಲ್ಲಿ ಮಾಸಯಿಗಳು ಯಾರೂ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಒಪ್ಪುವುದಿಲ್ಲ. ಲೇರಿಯೊಂಕ ಏನೇನೋ ಸಬೂಬು ಹೇಳಿ ಮನೆ ಬಿಟ್ಟು ಕಾಲ್ನಡಿಗೆಯಲ್ಲಿ ಬಹು ದೂರ ಸಾಗಿ , ಹಳ್ಳ-ತೊರೆ-ಗುಡ್ಡ-ಕಾಡುಗಳನ್ನು ದಾಟಿ, ಅನೇಕ ಅಪಾಯ-ತೊಂದರೆಗಳನ್ನು ಎದುರಿಸಿ ದೂರದ ನಗರ ಸೇರಿ ಅಲ್ಲಿ ಎಂಟು ವರ್ಷಗಳ ಕಾಲ ವಿದ್ಯಾಭ್ಯಾಸ ಮಾಡುತ್ತಾನೆ. ಆಗ ಅವನಿಗೆ ವಿದ್ಯಾವಂತರೆಲ್ಲ ಬಿಳಿಯರ ವಿರುದ್ಧ ನಿಂತು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸುತ್ತಿರುವುದು ಕಾಣುತ್ತದೆ.   ಕೆನ್ಯಾದವರಿಗೆ ತಮ್ಮನ್ನು ಆಳಿಕೊಳ್ಳುವ ಶಕ್ತಿಯಿದೆ, ಆದ್ದರಿಂದ ಬಿಳಿಯರು ತಮ್ಮ ಮೇಲೆ ಅಧಿಕಾರ ಚಲಾಯಿಸುವ ಅಗತ್ಯವಿಲ್ಲವೆನ್ನುವ ಭಾವನೆ ಲೇರಿಯೊಂಕನಿಗೂ ಬರುತ್ತದೆ.  ಎಲ್ಲ ವಿದ್ಯಾವಂತರಂತೆ ಕೆನ್ಯಾ ಸ್ವತಂತ್ರವಾಗಬೇಕು, ಮತ್ತು ತನ್ನ ಸಂಸ್ಕೃತಿಯ ಎಲ್ಲ ಅಂಶಗಳನ್ನು ಉಳಿಸಿಕೊಂಡು ಆ ಬಗ್ಗೆ ಅಭಿಮಾನ ಪಡಬೇಕು ಎಂಬ ಆಶಯವನ್ನು ಲೇರಿಯೊಂಕನೂ ಇಟ್ಟುಕೊಳ್ಳುತ್ತಾನೆ.  ವಿದ್ಯೆ ಪಡೆದರೆ ಕಪ್ಪು ಜನರೂ ಬಿಳಿಯರ ಸಮಾನರಾಗಬಲ್ಲರು ಎಂಬ ನಂಬಿಕೆಯನ್ನು ಹಿರಿಯ ತಲೆಮಾರಿನವರಲ್ಲೂ ಹುಟ್ಟಿಸಿ ಕಾದಂಬರಿ ಕೊನೆಗೊಳ್ಳುತ್ತದೆ. ಕಾದಂಬರಿಯುದ್ದಕ್ಕೂ ಮಾಸಯಿ ಜನಾಂಗದ ಜೀವನ ಪದ್ಧತಿ, ನಂಬಿಕೆ-ಆಚರಣೆಗಳು, ನಡೆ-ನುಡಿ-ವರ್ತನೆ, ಅವರು ಸಂಬಂಧಗಳನ್ನಿಟ್ಟುಕೊಳ್ಳುವ ಪರಿ ಮತ್ತು ಅವರ ನಾಣ್ಣುಡಿ-ಗಾದೆ ಮಾತುಗಳು ತುಂಬಿಕೊಂಡಿವೆ.  ವಸ್ತು-ವಿನ್ಯಾಸ-ರಚನೆ, ನಿರೂಪಣೆ-ಪಾತ್ರ ಚಿತ್ರಣಗಳ ದೃಷ್ಟಿಯಿಂದ  ಇದು ಅತ್ಯುತ್ತಮವಾದ ಒಂದು ಕೃತಿ. ಆಧುನಿಕೋತ್ತರ ಸಾಹಿತ್ಯದ ಒಂದು ಪ್ರಮುಖ ಲಕ್ಷಣವಾಗಿರುವ ಬದಿಗೆ ತಳ್ಳಲ್ಪಟ್ಟ ಜನಾಂಗದ ಬದುಕಿನ ಚಿತ್ರಣ ಇಲ್ಲಿರುವುದರಿಂದ ಇದರ ಅನುವಾದ ಅತ್ಯಂತ ಪ್ರಸ್ತುತ.  ಅನುವಾದಕರ ಪ್ರಯತ್ನ ಶ್ಲಾಘನೀಯ. ಆದರೆ ವಾಕ್ಯ ರಚನೆ ಮತ್ತು ಪದಪ್ರಯೋಗಗಳನ್ನು ಸಮರ್ಪಕವಾಗಿ ಮಾಡುವಲ್ಲಿ ಇನ್ನಷ್ಟು ಪರಿಶ್ರಮವಿದ್ದರೆ ಒಳ್ಳೆಯದು. ******************************************** ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

ಕಾವ್ಯಯಾನ

ಮನ -ಮಸಣದಲ್ಲಿ ಶಾಲೆ

ಕವಿತೆ ಮನ -ಮಸಣದಲ್ಲಿ ಶಾಲೆ ಕಾವ್ಯ ಎಸ್. ಮನ- ಮಸಣ ಅಕ್ಷರಗಳ ವ್ಯತ್ಯಾಸದಲ್ಲಿ ಹುಟ್ಟುವ ಹಳೆಯದಾದರೂ ಹೊಸ ನಂಟು ಮಕ್ಕಳಿಲ್ಲದ ಶಾಲೆ ಮಸಣದ ಭಾಸ ಮಸಣ ಕಾಯುವವನು ಆಲಸಿ ಆಚಾರ್ಯ ಮೌನಕ್ಕೂ ಮೌನ ಕಲಿಸುವ ನಿಶ್ಯಬ್ದತೆ ನಿಗೂಢ ಶಬ್ದದೊಂದಿಗೆ ಆಗಾಗ್ಗೆ ಬಂದು ಏನಾದರೂ ಅರ್ಥ ಕೊಟ್ಟು ಹೋಗ್ವ ತಂಗಾಳಿ ಮನಕ್ಕೆ ಬಡಿದಿದ್ದ ಪೈಶಾಚಿಕತೆ ಶಾಲೆಯ ತುಂಬೆಲ್ಲಾ ನಲಿದಾಡುತ್ತಿದೆ ಮಕ್ಕಳ ಆರ್ಭಟಕ್ಕೆ ಗುಡುಗಿದರು ಅಲುಗದ ಶಾಲೆ ಗುಂಡುಸೂಜಿ ನೆಲಅಪ್ಪಿದರು ಕರಾಳ ಅಳುವು ನೀರಿದ್ದರು ಜೀವ ಕಳೆದುಕೊಂಡು ತೊಟ್ಟಿಕ್ಕುತ್ತಿರುವ ನೀರಕೊಳವೆಗಳು ಬೋರ್ಡು , ಕಾರ್ಡು , ಬೆಂಚುಗಳ ಮಾಲೀಕತ್ವ ವಹಿಸಿರುವ ಇಲಿರಾಯ ತನ್ನದೆ ಕಾರುಬಾರು ನಡೆಸಿದ್ದಾನೆ ಹೂ-ಗಿಡ , ತರಗೆಲೆಗಳು ಮಕ್ಕಳ ಆರೈಕೆ ಅರಸಿ ಬರುವಿಕೆಗಾಗಿ ಬಾಗಿ ಸ್ವಗತ ಕೋರುತ್ತ ಭೂತಬಂಗಲೆಯ ಸೇವಕರಾಗಿ ನೇಮಕಗೊಂಡಿವೆ ಆಟದ ಮೈದಾನಗಳು ಮಾನವ ಕೃತ್ಯಕ್ಕೆ ರಣರಂಗದ ಅವಶೇಷವಾಗಿವೆ ಇದ್ದಾಗ ತಿಳಿಯದ ಅರಿಯದ ಪ್ರೀತಿ ಸ್ವಲ್ಪ ಸ್ವಲ್ಪವೇ ಅರಿವಿನ ಗುಳಿಗೆ ನುಂಗಿಸುತ್ತಿದೆ ಕಾಡುವ ಪಾಪಪ್ರಜ್ಞೆಯಲ್ಲಿ ಮುಳುಗೇಳುವ ಅಜ್ಞಾತವಾಸ. ***********************************

ಮನ -ಮಸಣದಲ್ಲಿ ಶಾಲೆ Read Post »

ಕಾವ್ಯಯಾನ

ಅವ್ವ

ಕವಿತೆ ಅವ್ವ ಡಾ. ಅರಕಲಗೂಡು ನೀಲಕಂಠ ಮೂರ್ತಿ ಅವ್ವಮೂವತ್ತು ಮಳೆಗಾಲಮತ್ತಷ್ಟೇ ಬೇಸಿಗೆ ಬಿಸಿಲುಕೆಲವೊಮ್ಮೆ ಬೆಂಕಿಯುಗುಳುಎಲ್ಲ ಸವೆಸಿದ್ದಾಯ್ತು ನೀ ಇಲ್ಲದೆ! ಅಂದು –ನಿನ್ನ ಹೂತು ಬಂದಆ ಮಣ್ಣ ಅಗುಳ ಕಣ ಕಣಜೊತೆಗೆ ಒಡೆದ ಮಡಕೆಯ ಚೂರು ಪಾರುಇನ್ನೂ ಬಿಟ್ಟಿಲ್ಲ ನನ್ನಮೆದುಳಲ್ಲವಿತು ಕಸಿಯಾಗಿಸೂಸುವುದುಅರಳಿ ದಿನಕ್ಕೊಂದು ಹೊಸ ಹೂವಾಗಿ…ಹೂಸ ಹೊಸ ಕಂಪು!ಮತ್ತು ಕತ್ತು ಹಿಸುಕುವ ನೆನಪು… ಒಂದು ದಿಕ್ಕಿಗೆ ಕಾಚು ಕಡ್ಡಿಪುಡಿಇನ್ನೊಂದೆಡೆ ಮರೆಮಾಚಿದ ರೋಗರುಜಿನಮತ್ತು ನಿತ್ಯ ನಂಜಾದದಾಯಾದಿ ಅವಿಭಕ್ತಕುಟುಂಬ!ಕೊನೆಗೆ ಹೆಣಗೆಲಸದ ಹೆಣಗು –ಈ ನಾಲ್ಕು ಶೂಲಗಳು ನಾಲ್ಕು ದಿಕ್ಕಿನಹೆಗಲಾಗಿ ಹೊತ್ತು ಹೋದದ್ದುಇಂದಿಗೂ ನನ್ನ ಗುಂಡಿಗೆಯ ದದ್ದು! ಕ್ರಮೇಣಅಪ್ಪನ ಪಯಣಜೊತೆಜೊತೆಗೆಒಡಹುಟ್ಟಿದವರೂ ಕೂಡ ಚಿತೆಗೆಸರದಿಯೋಪಾದಿ…ನನ್ನ ಶೇಷವಾಗುಳಿಸಿಬಹುಶಃ ನಿನ್ನ ಪ್ರತಿನಿಧಿಸಿ! ಈಗಎಲ್ಲಿ ಶೋಧಿಸಲಿಈ ಅನಂತ ಬ್ರಹ್ಮಾಂಡದಲಿನಿನ್ನ ಮರುಹುಟ್ಟುಎಂಬ ಹುಚ್ಚು ಕನಸು ಹೊತ್ತುಯಾವ ಜೀವಯಾವ ಜಂತುಆಕಾರದಲಿ ನಿನ್ನ ಆ ಅಂದಿನ ದಿರಿಸುಅಥವನಮ್ಮ ಮೀರಿ ಬೆಳೆದವಿಶ್ವರೂಪದಪ್ರತಿಮೆಯ ಹೊಸ ಜೀವಿಗಳಲಿ…ಎಲ್ಲಿ ಸಂಶೋಧಿಸಲಿ –ನೀನೀಗ ತಳೆದನಿನ್ನ ಆ ಹೊಸ ಆಕೃತಿಒಮ್ಮೆಯಾದರೂ ನನ್ನಮರಣದ ಮುನ್ನ…? ***********************************

ಅವ್ವ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಮರುಳಸಿದ್ದಪ್ಪ ದೊಡ್ಡಮನಿ ಅದ್ಯಾವ ಗಳಿಗೆಯಲಿ ನನ್ನಿಂದ ದೂರವಾದೆ ಗೆಳತಿಮನದೊಳು ಭಾವನೆಗಳ ಬಿತ್ತಿ ಮರೆಯಾದೆ ಗೆಳತಿ ಹೃದಯದಿ ಪ್ರೀತಿ ಬಸಿದು ಮೌನ ನೀಡಿದೆಯಲ್ಲಸಾವಿನ ಮನೆ ಅಂಗಳದಿ ಹೆಜ್ಜೆ ಮೂಡಿದೆ ಗೆಳತಿ ಮೊಳ ಹೂವು ತಂದವರು ಶವಕೆ ಅರ್ಪಿಸಿದ್ದಾರೆನನ್ನ ಹೆಣದ ಮೆರವಣಿಗೆಯುದ್ದಕೂ ಧ್ಯಾನಿಸಿದೆ ಗೆಳತಿ ಹಾದಿ ಬೀದಿಯಲಿ ನಮ್ಮಿಬ್ಬರದೆ ಮಾತು ಜನರ ಬಾಯಲ್ಲಿಧರೆಯ ನಾಚಿಸುವ ಜೋಡಿ ಎಂದು ಹೊಗಳಿದೆ ಗೆಳತಿ ಲೋಕ ನಿಂದೆ ಹೊಗಳಿಕೆಯ ಕೇಳದೆ ಸುಮ್ಮನಿದ್ದೆವುಒಳಗಾದ ಗಾಯ ನೋವು ಯಾರಿಗೂ ತಿಳಿಯದೆ ಗೆಳತಿ ಮರುಳ ಸಾಕಿನ್ನೂ ಲೋಕದ ಚುಚ್ಚು ಮಾತಿನ ತಿವಿತಗೋರಿಯ ಹಿಡಿ ಮಣ್ಣಿಗೆ ಜೀವ ಕಾದಿದೆ ಗೆಳತಿ *******************************

ಗಝಲ್ Read Post »

ಕಾವ್ಯಯಾನ, ಗಝಲ್

ಗಜಲ್

ಗಝಲ್ ರಜಿಯಾ ಬಳಬಟ್ಟಿ ಬಂದ ದಾರಿಗೆ ಸುಂಕವಿಲ್ಲದಂತೆ ಹೋಗಲೇಬೇಕೀಗ.ಬಂದ ಹಿಸಾಬು ಮುಗಿಯದಿದ್ದರೂ ಮರಳಲೇಬೇಕೀಗ. ಅರಿತವರಾರೋ ತಿರುಗಿಬಿದ್ದವರಾರೋ ಬಂಧ ದೂರಾದಾಗ,ಎಲ್ಲ ಕೊಂಡಿಗಳ ಕಳಚಿ ಹೊರಳಲೇ ಬೇಕೀಗ. ನನ್ನ ನಿನ್ನ ಮಾತು ಅದೆಷ್ಟು ಬಾಕಿ ಉಳಿದರೇನೀಗ,ಗಾಡಿಯ ಪೆಟ್ರೋಲು ತೀರಿದಾಗ ನಡೆದು ಹೋಗಲೇಬೇಕೀಗ. ಅದೆಷ್ಟು ಕಸ ಮುಸುರೆಯ ತಾಣವಾದರೇನೀಗ,ಮೂಗು ಮುಚ್ಚಿ ಕೈ ಬಿಡಿಸಿ ಹೆಜ್ಜೆ ಹಾಕಲೇಬೇಕೀಗ. ನಿನ್ನ ಪ್ರೀತಿಯ ಹಂಬಲಿಸಿ ಅದೆಷ್ಟು ಮಿಡಿದರೇನೀಗ,ಅಗಲಿಕೆಯನು ಬೆನ್ನಿಗಂಟಿಸಿ ರಾಜಿ ಚಡಪಡಿಸುವ ದಿನಗಳೇ ಎಲ್ಲ ಈಗ ******************************************

ಗಜಲ್ Read Post »

ಕಾವ್ಯಯಾನ

ಅರ್ಪಣೆ

ಕವಿತೆ ಅರ್ಪಣೆ ದುರಿತ ಕಾಲದ ಅಬ್ಬರದನಡುವೆ , ಸದ್ದು ಮಾಡಿದೆಸಮೂಹ ಮಾಧ್ಯಮ. ಸಾಹಿತ್ಯದ ಹೊಸ ಮಜಲಿನಹುಡುಕಾಟ, ಮನೆ ಮಾಡಿದೆವೆಬಿನಾರ್ ನ ಜಪ. ಯೂಟ್ಯೂಬ್ ಫೇಸ್ ಬುಕ್ಲೈವ್ ಮಂತ್ರದ ತಾಕಲಾಟಕೆಬುದ್ಧಿಗೆ ಕುಮ್ಮಕ್ಕು ಕೊಟ್ಟುಗಂಟೆ ಬಾರಿಸಲೇಬೇಕು . ಬುಟ್ಟಿಯೊಳಗಿನ ಹಾವಿನಂತೆಫೀಡ್ ಬ್ಯಾಕ್ ಕನವರಿಕೆ .ಇ-ಪ್ರಮಾಣ ಪತ್ರದ ಪ್ರಸಾದಪಡೆದಾಗಲೇ ಕೃತಾರ್ಥ . ಆನ್ ಲೈನ್ ಗೋಷ್ಠಿಗಳಲ್ಲಿನಟರಾಜನ ಪುಟ ನರ್ತನ .ಪ್ರಶಂಸೆ ,ಅಭಿನಂದನಾ ಪತ್ರಸಹಿ ಮಾಡುವ ತವಕ . ದಿನಕ್ಕೊಂದು ವಸ್ತುವಿನ ಆಮಿಷವಾಟ್ಸಪ್ ಟೆಲಿಗ್ರಾಂಗಳಲ್ಲಿ.!!ಕವಿ ಬದುಕಿನ ಪ್ರಶ್ನೆ ?ಉಸಿರಾಗಬೇಕು ಸತ್ಯ ಸತ್ಯ . ಮತ್ತೆ, ಇನ್ನು ಈ ಕಾವ್ಯಾಭಿಷೇಕಕ್ಕೆಸಾಕ್ಷಿ ಕರೋನಾ! ನಿನಗೆದೀರ್ಘದಂಡ ನಮಸ್ಕಾರ. -*****************************

ಅರ್ಪಣೆ Read Post »

ಕಾವ್ಯಯಾನ

ದೈವನಿಹನು

ಕವಿತೆ ದೈವನಿಹನು ದಯಾನಂದ ಕೆ ಚಂದ್ರಶೇಖರಯ್ಯ ಗುಡಿ ಗುಂಡಾರಗಳ ಕಟ್ಟಿನಾಮಫಲಕದೊಳು ವೈಭವಿಸಿದಿರೇನು?ಮಡಿಯ ಮಾಡಿ ಹೂವು ಹಣ್ಣು ಕಾಯಿಡಿದು ಗುಡಿಯಹೊಕ್ಕಿರೇನು ? ಕಲ್ಲಾಗಿ ಕುಳಿತ ಅವನಿಗೆಕ್ಷೀರಾಭಿಷೇಕವ ಮಾಡಿರೇನು?ನಿರ್ವಿಕಾರ ಪರಮಶಿವನಿಗೆಮೃಷ್ಟಾನ್ನವ ಉಣ ಬಡಿಸಿದರೇನು? ಜಡನೀವನು, ಹಸಿವಿರದವನುಉಸಿರಿರದವನು ಹೆಸರರಿರದವನು,ನಿರ್ವೀಕಾರ ಅಗೋಚರನಿವನುಅವರವರ ಭಾವದಲಿ ನೆಲೆಸಿಹನು, ಎಮ್ಮ ಶಿವ ಹೃದಯಶಿವಆತ್ಮಸಾಕ್ಷಾತ್ಕರದೊಳು ನೆಲಸಿಹನು, ಕರುಣಿಯಲಿ ತ್ಯಾಗದಲಿ,ಮನುಷತ್ವದಲಿ ದೈವನಿಹನು *******************

ದೈವನಿಹನು Read Post »

ಕಾವ್ಯಯಾನ

ಅವಳೆಂದರೆ?

ಕವಿತೆ ಅವಳೆಂದರೆ? ಪವಿತ್ರ.ಎಂ. ಅವಳೆಂದರೆ ಹಾಗೆಯಮ್ಮಅವಳಿರುವೆಂದರೆ ನಲಿವುಅವಳಿರುವೆಂದರೆ ಮರುಳುಅವಳಿರುವೆಡೆ ನಗೆ ಹೊನಲುಅವಳಿಂದಲೆ ಜಗವುಅವಳಿರದಿರೆ ಅಳಿವು ಅವಳು ಅಬಲೆ ಎಂದೆ ನೀನುಮೇಲರಗಿ ಒಸಕಿ ಹಿಸುಕಿಸಾವಮನೆಗೆ ಆಹುತಿ ಆಗಿಸಿನೋವ ನೋಡುತಾ ಹೇಗೆನಿಂತೆ?ಅದೇಗೆ ನಿಂತೆಮರುಕವಿರದೆ ಮೃಗವಾದೆಯ ಅವಳೊಡಲ ಆಸರೆಯ ಮರೆತೆಯಾಮರುಗಟ್ಟಿತೆ ಹೃದಯಮನವಿಹುದು ಮನುಜನಿಗೆಅದಕಾಗೆ ಅವ ಮನುಜಎಲ್ಲ ಮರೆತೆಯಲ್ಲ ಇಂದುಪಿಶಾಚಿಗೂ ಮಿಗಿಲಾದ ರಕ್ಕಸ ಕರುಳುಹಿಂಡೊ ಕೃತ್ಯವೆಸಗಿಕಾರ್ಕೋಟ ವಿಷವ ಕಾರಿಪುರುಷ ಪೌರುಷವೆಂದು ತೋರಿಅವಳೆದೆಯ ಬಗೆದೆಯಲ್ಲಮೃಗಕು ಕೀಳು ಮರುಕವಿರದ ಮಾನವಕಾಮಾಂಧ ದಾನವ ರುದಿರ ಹರಿವಾಗ ಕರಗಲಿಲ್ಲಅವಳಾರ್ತ ಕೂಗು ಕೇಳಲಿಲ್ಲಅಂದೂ ಇತ್ತು ಯುದ್ಧದಮಲುಇಂದಿಗೂ ಅದರದೇ ಘಾಟುನಾಗರೀಕ ನಗೆಪಾಟಲುಬಗೆ ಬಗೆಯ ನೀತಿ ನಿಯಮಅನೀತಿಗಾಳಾಗಿಹನುಸಾಕ್ಷಾತ್ಕಾರವಿರದ ಮನುಜನು. ಕಾಯುವರಸುತನದ ಕೇಡುಎಲ್ಲ ಅರಸರೇ..ಕಣ್ಣಿಗೆಣ್ಣೆಸತ್ತ ಸಾಕ್ಷಿ ಸಾಲದುಬರಿದೆ ಬರೆಯಲಾರದೆಅನ್ಯಾಯದ ತೀರ್ಪಗೀಚಲುನ್ಯಾಯದೇವತೆ ಕುರುಡ ಮಾಡಿನೂಕಿ ನೂಕಿ ಕಾಲವ ಅಟ್ಟಹಾಸ ಮೆರೆದುಬಲಾತ್ಕಾರದುನ್ಮಾದಮರೆಸಿತೇ ಮಾನವತೆಅವಳಮ್ಮನ ಅಳಲೆಷ್ಟೊಭೀತ ಬೀಭತ್ಸಳಾದಳಿಲ್ಲಿಅಮ್ಮ ತನ್ನ ಮಡಿಲ ತುಂಬಿ ನಗುತ ಮಲಗಿಹ ಮನೆಯಬೆಳಗೊ ಲಕುಮಿ ಭವಿತವವನೆನೆದು ಬೆಚ್ಚಿಬೆವರಿತಿಳಿಯದಾಗಿ ಪಾಪ ಪುಣ್ಯನೆಲಕುರುಳಿದಳೀಕೆಅಮ್ಮನಾದ ಪಾಪಕೆ!? **********************

ಅವಳೆಂದರೆ? Read Post »

You cannot copy content of this page

Scroll to Top