ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ರೈತನ ಮಗ ನಾ

ಕವಿತೆ ರೈತನ ಮಗ ನಾ ಚಂದ್ರು.ಪಿ.ಹಾಸನ ನಾನೊಬ್ಬ ನಿಮ್ಮೆಲ್ಲರ ಅಚ್ಚ ಕನ್ನಡಿಗಹಳ್ಳಿಯ ಸೀದಾ ಸಾದಾದ ಹುಡುಗಸಿಂಪಲ್ಲಾಗೈತೆ ರೀ ನನ್ನ ಲೈಫ್ ಸ್ಟೈಲುನೋವಾದ್ರೂ ಕೊಡ್ತೀನೊಂದು ಸ್ಮೈಲು ಯಾವಾಗ್ಲು ನಾನಾಗಿರ್ತೀನಿ ಮೌನಿಒಮ್ಮೊಮ್ಮೆ ಹಿಡಿತಿರ್ತೀನಿ ಲೇಖನಿಬರೆಯೋಕ್ ಕುಂತ್ರೆ ಹುಚ್ಚನಂಗಾಗ್ತೀನಿಸುಮ್ ಸುಮ್ನೆ ತೋಚಿದ್ದು ಗೀಚ್ತೀರ್ತೀನಿ ಏನೇನೋ ಹುಚ್ಚ್ ಹುಚ್ಚಾಸೆ ಇಟ್ಕೊಂಡುಸುಮ್ನಿರ್ತೀನಿ ತಲೆ ತುಂಬಾ ಕೆಡ್ಸ್ಕೊಂಡುಅಣುಕಿಸಿದವರ ಮನಸ್ನಲ್ಲೇ ಬೈಕೊಂಡುಉತ್ತರಿಸೋಕ್ಕೆ ಸಮ್ಯಾನ್ನ ಕಾಯ್ಕೊಂಡು ಹಳ್ಳಿಯ ಸೊಗಡಲ್ಲಿ ದಿಲ್ಲೀಯಾ ಕಾಣ್ತೀನಿಕೊಳ್ಳೀಯಾ ಹಿಡಿದಾದ್ರೂ ಗುರಿ ಮುಟ್ತೀನಿಸೋತೆಜ್ಜೇಗಳೊಂದೇ ಮೆಟ್ಲಾಗುಸ್ಕೊಂಡುಸಾಗ್ತೀನಿ ಎದ್ಯಾಗೊಂದ ಛಲವಿಟ್ಕೊಂಡು ದೇಸಕ್ಕೆ ಅನ್ನ ಕೊಡೋ ರೈತಾನ ಮಗಾನಾಮೋಸಕ್ತಲೆಕೊಡೋದಿಲ್ರೀ ಜಾಯ್ಮಾನಾನಂಜಿಲ್ದಾ ವಂಶ್ದಲ್ಲಿ ಹುಟ್ಟಿದ ಕೂಸು ನಾಪ್ರೀತಿ ಸಂಬಂಧಕ್ಕ ಪ್ರಾಣಾನಾ ಕೊಡ್ತೀನಾ ಹಸನಾದ ಕಾಲಬರೋದ್ಯಾರೂ ತಿಳಿದಿಲ್ರೀಹುಟ್ಸೀದ ಸಿವನು ಸಟ್ಗೆ ಹುಲ್ಮೈಸೋದಿಲ್ರೀಕಾಲದ್ಮುಂದೇ ನಾವೆಲ್ಲ ಯಾವ್ಯಾವ್ಲೆಕ್ಕಾರೀಒಳ್ಳೇದ್ಮನಸ್ನಾಗಿಟ್ಕೊಂಡ್ ಜೀವ್ನಾನ್ಸಾಗ್ಸ್ರೀ **********************************

ರೈತನ ಮಗ ನಾ Read Post »

ಅನುವಾದ

ಇದು ದುಃಖದ ಸಂಜೆ

ಅನುವಾದಿತ ಕವಿತೆ ಇದು ದುಃಖದ ಸಂಜೆ ರಘುಪತಿ ಸಹಾಯ್ ಫಿರಾಖ್ ಗೋರಖ್ ಪುರಿ ಕನ್ನಡಕ್ಕೆ : ಆರ್.ವಿಜಯರಾಘವನ್ ಇದು ದುಃಖದ ಸಂಜೆ; ಚತುರೆಯ ಆ ನೋಟವ ಕುರಿತು ಮಾತನಾಡಿಮಾದಕತೆ ಹರಡುತ್ತಿದೆ; ಈಗ ರಹಸ್ಯವ ಕುರಿತು ಏನಾದರೂ ಮಾತನಾಡಿ. ಚತುರೆಯ ಈ ಮೌನ; ಇದು ಹೃದಯದ ರಕ್ತನಾಳಗಳ ಕೀಳುತ್ತಲಿದೆಈ ಮೌನದಲ್ಲಿ, ವಾದ್ಯ ಮುರಿಯುವ ಕುರಿತು ಏನಾದರೂ ಮಾತನಾಡಿ ಹರಡುವ ಕೂದಲಿನ ಘಮಲು! ದುಃಖಕ್ಕೆ ಮುಸುಕ ಹಾಕುವ ಕಥೆ!ಮುಂಜಾನೆ ಬರುವನಕ ಅಂತಹ ವಿಷಯಗಳ ಕುರಿತು ಮಾತನಾಡಿ ಹೃದಯದ ಪ್ರತಿ ರಕ್ತನಾಳವ ನೂಕಿತ್ತೆಸೆಯಲಿ! ಅದಕೂ ನೋವಾಗಲಿ!ಅಂತೆಯೇ ಅವಳ ಉಚಿತ-ಅನುಚಿತ ಚತುರತನ ಕುರಿತು ಮಾತನಾಡಿ ರಹಸ್ಯಗಳ ಆ ಧ್ವನಿಯ ಮೌನವ ಕುರಿತು ಮಾತನಾಡಿಅನಸ್ತಿತ್ವದ ಮೂಲತತ್ವವನು, ಜೀವನಸಂದೇಶವನ್ಕು ಕುರಿತು ಮಾತನಾಡಿ ಪ್ರೀತಿಯನು ಅಪಕೀರ್ತಿಗೆಳೆಸಲು ಪ್ರಾರಂಭಿಸಿದೆ, ಆನಂದವಿಲ್ಲ, ಬರೀ ಬೇಸರ ಇಂದು, ದೃಷ್ಟಿ ತಪ್ಪಿಸುವ ಅವಳ ಕಣ್ಣಿನ ಕುರಿತು ಮಾತನಾಡಿ ಯಾರ ಹೆಸರಿನ ಉಲ್ಲೇಖವೇ ಬಣ್ಣ ಪರಿಮಳದ ವಿಶ್ವವನು ಸೃಷ್ಟಿಸುವುದೋಓ, ಗೆಳೆಯರೇ! ಆ ಚದುರೆಯರ ಹೊಸ ವಸಂತವ ಕುರಿತು ಮಾತನಾಡಿ ನಿರ್ಲಕ್ಷ್ಯದ ಕ್ಷಮೆಯ ಅರ್ಥವೇನು? ಪ್ರೀತಿಯ ಮೇಲೇಕೆ ಆರೋಪ?ಇಂದು, ವಿಂಗಡನೆಗಳ ಸೃಷ್ಟಿಕರ್ತ ಆಕಾಶದ ಬಗ್ಗೆ ಮಾತನಾಡಿ ಪಂಜರದ ಸರಳು‌ಗಳ ತೂರಿ ಎಂತೆಂಥದೋ ಬೆಳಕು ಒಳಗೆ ಸೋಸುತ್ತಿದೆತೆರೆದ ಸ್ಥಳಗಳ, ಅತೃಪ್ತ ಬಯಕೆಗಳ ಕುರಿತು ಏನಾದರೂ ಮಾತನಾಡಿ ಅದು ಅನಂತ ಬಾಳ್ವೆ, ಹಠಾತ್ ಸಾವು, ಎಷ್ಟು ಅನಿರೀಕ್ಷಿತಗಳುಇಂದು, ನಾಜ್ಮತ್ತು ಆಂದಾಜ್ನ ಕುರಿತು ಏನಾದರೂ ಮಾತನಾಡಿ ಅಸಡ್ಡೆಯೊಡಗೂಡಿದ ಪ್ರೀತಿಯೂ ತುಸು ಸಹನೆಯಿಂದಿರಲು ಅನುವಾಗಿದೆಮೋಡಿ ಮಾಡುವ ಸೌಂದರ್ಯದ ಖನಿಯ ಲವಲವಿಕೆಯ ಕುರಿತು ಮಾತನಾಡಿ ಓ, ಫಿರಾಕ್, ಇಂದುಕ್ರಿಸ್ತನಂತೆ ಜೀವ ನೀಡುವ ಗುಣವ ಹೊಂದಿದವನ ಕುರಿತು ಮಾತನಾಡಿಅವಳ ಮರುಹುಟ್ಟಿನ ಪ್ರೀತಿಯಿಂದ ದೂರ ಹೋಗುವುದರ ಕುರಿತು ಮಾತನಾಡಿ. *******************************

ಇದು ದುಃಖದ ಸಂಜೆ Read Post »

ಕಾವ್ಯಯಾನ

ನೆರಳು-ಬೆಳಕು

ಕವಿತೆ ನೆರಳು-ಬೆಳಕು ಕಾತ್ಯಾಯಿನಿ ಕುಂಜಿಬೆಟ್ಟು ಕಣ್ಣುಗಳಿಂದ ಉದುರುವನಕ್ಷತ್ರಗಳನ್ನುಆಕಾಶಕ್ಕೆ ಸಿಕ್ಕಿಸುತ್ತಿರುವಶಾಂತ ಇರುಳು… ಮರ ಗಿಡ ಬಳ್ಳಿಗಳುತಮ್ಮ ನೆರಳನು ಬಿಟ್ಟುಲೋಕ ಸಂಚಾರಕೆಹೊರಡುತ್ತವೆ ಕಡಲು ಭೋಗ೯ರೆಯುತಮರಳ ತೀರಕೆನೊರೆನೊರೆ ಹಾಲುಣಿಸುತ್ತನೆರಳಾಗಿಬಿಡುತ್ತದೆ ಹಕ್ಕಿಗಳು ಬೆಳಕು ರೆಕ್ಕೆಗಳನ್ನುಬಿಚ್ಚಿ ಹಾರುತ್ತ ಹಾರುತ್ತಕಪ್ಪು ನೆರಳುಗಳಾಗಿಚುಕ್ಕಿಗಳಾಗಿ ಮರೆಯಾಗುತ್ತವೆ ಈ ದೇಹದಿಂದ ಬೆಳಕೊಂದುಲೋಕ ಸಂಚಾರಕೆ ಹೊರಟಾಗನೆರಳು ನಿದ್ರಿಸುತ್ತದೆಮುಂಜಾನೆ ಮತ್ತೆ ಅದು ಮರಳಿನನ್ನನ್ನು ಪ್ರವೇಶಿಸುವವರೆಗೂ…ಒಂದು ದಿನ ಸಂಚಾರದಲ್ಲೇ ಮೈಮರೆತ ಅದುನನ್ನನ್ನೇ ಮರೆತುಬಿಡಬಹುದುನಾನು ಅದರ ನೆನಪಲ್ಲೇ ಇರುವಾಗಇನ್ನಾರದ್ದೋ ನೆರಳು ಕೊಳ್ಳಿ ಹಿಡಿದುಬೆಳಕು ಹಚ್ಚುವೆನೆಂದು ಬೆಂಕಿ ಹಚ್ಚಬಹುದು ಇರುಳಲ್ಲಿ ಸೂಯ೯ನ ನೆರಳುನಿದ್ರಿಸುತ್ತದೆಭೂಮಿಯ ನೆರಳು ತನ್ನನ್ನು ಭೂಮಿ ಅಂದುಕೊಂಡುನಿದ್ದೆಯಲ್ಲೇ ನೆರಳನ್ನೇ ಸೂಯ೯ನೆಂದು ಭ್ರಮಿಸಿಸುತ್ತುತ್ತಲೇ ಇರುತ್ತದೆ.. ಭೂಮಿಯ ಒಳಗೆ ನಾನೂ ಕೂಡನನ್ನ ನೆರಳನ್ನು ನಾನೇ ಎಂದುಕೊಂಡುಹಾಯಾಗಿ ಹಾಡನ್ನು ಹಾಡುತ್ತಿರುತ್ತೇನೆದೂರದಲ್ಲಿದ್ದರೂನೀನು ಕೇಳುತ್ತಿರುತ್ತಿ ಎಂಬಭ್ರಮೆಯಲ್ಲಿ ನಿನ್ನ ನೆರಳು ನಿನ್ನನ್ನೇ ಹುಡುಕುತ್ತಿರುತ್ತದೆನನ್ನದೇ ಬೆಳಕಲ್ಲಿ… ನಕ್ಷತ್ರಗಳಲ್ಲಿ. ********************************

ನೆರಳು-ಬೆಳಕು Read Post »

ಕಾವ್ಯಯಾನ

ನಿನ್ನ ಮೋಹಕೆ

ಕವಿತೆ ನಿನ್ನ ಮೋಹಕೆ ರೇಷ್ಮಾ ಕಂದಕೂರು ನಿನ್ನ ಮೋಹದ ಅರವಳಿಕೆಮೈಮನವ ಮರೆತ ಹಾಗಿದೆಭಾವೋನ್ಮಾದದ ಬೆಸುಗೆಗೆಬಾಚಿ ತಬ್ಬುವ ಇಳೆಯ ಪ್ರೀತಿಯಂತೆ ಸಾಚಾತನಕೆ ಪರಚಿದ ಗಾಯಮಾಸದ ಕಲೆಯ ಸ್ಥಿತಿಬೆಡಗು ಬಿನ್ನಾಣದ ರಿಂಗಣಲಗ್ಗೆ ಹಾಕುವ ನೆರೆಯ ಹಾವಳಿ ಕಣ್ಣ ಹೊಂಬೆಳಕಿನ ಕಿಡಿಹೊತ್ತಿಸಿದೆ ಅನುರಾಗದ ದೀಪ್ತಿಮೌನಕೂ ಕಸಿವಿಸಿಯಾದಂತೆಆಸರೆಯ ಒಡಲಲಿ ತವಕ ಅನುದಿನವು ಬೇಯುತಿದೆಸಹಚರಕೆ ಹಪಹಪಿಸಿದೆ ಕಂಗೆಟ್ಟುಇರುಳ ಬಾನ ತುಂಬಾ ನಗೆಯ ನಕ್ಷತ್ರಚೆಲುವಿನ ಚೈತ್ರಕೂ ಮರುಹುಟ್ಟು ವಿಸ್ಮಿತ ಪ್ರತಿಯ ಸ್ವರೂಪಸ್ವಪ್ನದಿ ಕಾಡಿದೆ ಬೆಂಬಿಡದೆಜ್ವಾಲಾಮುಖಿಯ ಆವೇಗದ ಸಂಚಾರಬೆರಗಿನ ಜಾಡು ಅನವರತ. ****************

ನಿನ್ನ ಮೋಹಕೆ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಅಮೃತ ಎಂ ಡಿ ನೋವಲ್ಲೂ ನಲಿವಿನ ಟಾನಿಕಿನ ಗುಟುಕುಂಟು ಗಾಲಿಬ್ಬದುಕೆಲ್ಲವು ಹಗದ ಮೇಲೆ ನಡೆದ ಕುರುಹುಂಟು ಗಾಲಿಬ್ ಹೇಳತಿರದ ಬೇಗೆಯೋದು ಸಜೀವ ದಹನ ಮಾಡಿದೆನಗುವಿನ ಮುಖವಾಡ ಧರಿಸಿ ಜೀವಿಸಿದ್ದುಂಟು ಗಾಲಿಬ್ ನನ್ನೊಳಗಿನ ಸಾಮರ್ಥ್ಯವನ್ನೆಲ್ಲಾ ಈ ಪ್ರೀತಿಯು ಕೊಂದಿದೆಗೈರುಹಾಜರಿಯಲ್ಲೂ ನಿರ್ಲಿಪ್ತ ಹಾಜರಿಯುಂಟು ಗಾಲಿಬ್ ನನ್ನರಸ ಮಧುಶಾಲೆಯಲ್ಲೇ ಜೀವನಪೂರ್ತಿ ಕಳೆದುಬಿಟ್ಟಬಾಳ ನೊಗಕ್ಕೆ ಹೆಗಲ್ಕೊಟ್ಟು ಹೈರಾಣಾಗಿದ್ದುಂಟು ಗಾಲಿಬ್ ಅಮ್ಮುವಿನ ನಸೀಬು ಬ್ರಹ್ಮಂಗು ಕಾರುಣ್ಯ ಪರಿಚಯಿಸಿದೆಅನುಗಾಲದ ಹೋರಾಟವು ಚಿರನಿದ್ರೆಯಲ್ಲುಂಟು ಗಾಲಿಬ್ *****************************************

ಗಝಲ್ Read Post »

ಕಾವ್ಯಯಾನ

“ಶಾವಾ”ತ್ಮ ಪದಗಳು

ಕವಿತೆ “ಶಾವಾ”ತ್ಮ ಪದಗ ಬಸಿರಿನುಸಿರು ಶಾಂತಿ ವಾಸು ಫಲವತ್ತಾದ ಮುಷ್ಟಿ ಮಣ್ಣು ಬೇಕೆಂದೆ….ಧಾರಿಣಿ, ಹುಟ್ಟಿಸಿ ನೋಡೆಂದಳು…. ನಿರ್ಮಲಾತಿನಿರ್ಮಲ ಜಲ ನೀಡೆಂದೆ….ಧರಿತ್ರಿ, ಹುಟ್ಟಿಸಿ ನೋಡೆಂದಳು…. ತಣಿಸುವ ಮಳೆ ಕಾಣದಾಗಿದೆಯೆಂದೆ…ಇಳೆ, ಹುಟ್ಟಿಸಲಾರೆಯಾ?? ಕೇಳಿದಳು…. ಮಳೆಯ ಎಳೆತರುವ ಕಾನನ ಕೊಚ್ಚಿಹೋಗಿದೆಯೆಂದೆ…ಭೂಮಿಜೆ, ಹುಟ್ಟಿಸಿ ಸಾಕಾಯಿತೇ ಪ್ರಶ್ನಿಸಿದಳು…. ಪ್ರಾಣಿ ಪಕ್ಷಿಗಳು, ಒಂದೊಂದೇ ಅಳಿಯುತ್ತಿವೆಯೆಂದೆ….ಅವನಿ, ಹುಟ್ಟಿಸು ನೋಡೋಣ ಸವಾಲೆಸೆದಳು…. ಮುಂದಿನ ಪರಂಪರೆಗೇನು ಉತ್ತರಿಸಲಿ??? ಎಂದೆ…ಭೂಮಿತಾಯಿ, ಸಕಲವ ಹುಟ್ಟಿಸುವ ಮೊದಲು, ಉಸಿರ “ಪ್ರಕೃತಿ”ಯಲ್ಲಡಗಿಸುವ ಬಸುರಾಗೆಂದಳು *****************************************************************

“ಶಾವಾ”ತ್ಮ ಪದಗಳು Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಅಂಕಣ ಬರಹ ಸೀಗಲ್ ಸೀಗಲ್ಮೂಲ : ಆಂಟನ್ ಚೆಕಾಫ್ ಕನ್ನಡಕ್ಕೆ : ಹೇಮಾ ಪಟ್ಟಣಶೆಟ್ಟಿಪ್ರ : ಅನನ್ಯ ಪ್ರಕಾಶನಪ್ರ.ವರ್ಷ :೨೦೦೭ಬೆಲೆ :ರೂ.೭೦ಪುಟಗಳು : ೧೦೮ ಎರಡು ತಲೆಮಾರುಗಳ ನಡುವಣ ಸಂಘರ್ಷವೇ ಈ ನಾಟಕದ ಮುಖ್ಯ ಕಥಾ ವಸ್ತು. ಇಬ್ಬರು ನಟಿಯರು ಮತ್ತು ಇಬ್ಬರು ಲೇಖಕರುಗಳ ನಡುವಣ ಸಂಬಂಧದ ಸ್ವರೂಪದ ಶೋಧನೆಯೇ ಇಲ್ಲಿನ ಮುಖ್ಯ ಕಾಳಜಿಯಾಗಿದೆ. ಹಿರಿಯ ನಟಿ ಅರ್ಕಾದಿನಾ ಮತ್ತು ಹಿರಿಯ ಲೇಖಕ ತ್ರಿಗೊರಿನ್ ಆಗಲೇ ಸಮಾಜದಲ್ಲಿ ತಮ್ಮ ನೆಲೆಯನ್ನು ರೂಪಿಸಿಕೊಂಡವರು. ಯುವಕ ತ್ರೆಪ್ಲೆಫ್ ಮತ್ತು ಎಳೆಯ ಯುವತಿ ನೀನಾ ಇನ್ನೂ ಅನನುಭವಿಗಳು. ಹಿರಿಯ ಜೋಡಿಗೆ ನಗರದ ಹಿನ್ನೆಲೆಯಿದ್ದರೆ ಕಿರಿಯ ಜೋಡಿಯ ಸ್ವಭಾವದಲ್ಲಿ ಗ್ರಾಮೀಣ ಸೊಗಡಿದೆ. ತ್ರೆಪ್ಲೆಫ್ ಪ್ರಸಿದ್ಧ ಲೇಖಕನಾಗಲು ಮತ್ತು ನೀನಾ ಪ್ರಸಿದ್ಧ ನಟಿಯಾಗಲು ಬಯಸುತ್ತಾರೆ. ಆದರೆ ತ್ರೆಫ್ಲೆಫ್ ನೀನಾಳನ್ನು ಪ್ರೀತಿಸಿದರೆ ನೀನಾ ತ್ರಿಗೊರಿನ್ ಬಗ್ಗೆ ಮೆಚ್ಚುಗೆಯಿಟ್ಟುಕೊಂಡಿದ್ದಾಳೆ. ತ್ರಿಗೊರಿನ್‌ಗೆ ನೀನಾ ಬೇಕು. ಆದರೆ ಅರ್ಕಾದಿನಾಗೆ ತ್ರಿಗೊರಿನ್ ಬೇಕು. ಹಾಗೆಂದು ಇದು ಸಾಮಾನ್ಯ ತ್ರಿಕೋನ ಪ್ರೇಮದ ಕಥೆಯಲ್ಲ. ಇದರ ಜತೆಗೆ ಮಾಶಾ ಮತ್ತು ಮೆದ್ವೆದೆಂಕೋ ಎಂಬ ಇನ್ನೊಂದು ಜೋಡಿಯ ಕಥೆಯೂ ಇಲ್ಲಿ ಹೆಣೆದುಕೊಳ್ಳುತ್ತದೆ. ಇಡೀ ನಾಟಕದಲ್ಲಿ ಪ್ರತಿಯೊಬ್ಬರೂ ಪ್ರೀತಿಯೆಂಬ ಮಧುರ ಸಂಬಂಧದ ಬೆನ್ನು ಹತ್ತಿದರೂ ವಾಸ್ತವದ ಬದುಕಿನಲ್ಲಿ ತಮ್ಮ ಆಸೆಗಳ ವೈಫಲ್ಯದಿಂದಾಗಿ ಹತಾಶರಾಗುತ್ತಾರೆ. ಮಾಶಾ ಮಾತ್ರ ವಾಸ್ತವವನ್ನು ಅರ್ಥ ಮಾಡಿಕೊಂಡು ಮೆದ್ವೆದೆಂಕೋನನ್ನು, ತಾನು ಆತನನ್ನು ಪ್ರೀತಿಸದೇ ಇದ್ದರೂ ಮದುವೆಯಾಗುತ್ತಾಳೆ. ಮನುಷ್ಯ ಸ್ವಭಾವ ಮತ್ತು ಮನುಷ್ಯ ಸಂಬಂಧಗಳ ವಿವಿಧ ವಾಸ್ತವಿಕ ಮುಖಗಳನ್ನು ನೈಜವಾಗಿ ಕಟ್ಟಿಕೊಡುವ ‘ಸೀಗಲ್ ‘ ನಲ್ಲಿ ಎಲ್ಲರೂ ಆ ಹಕ್ಕಿಯಂತೆ ಸ್ವಚ್ಛಂದವಾಗಿ ಹಾರಬಯಸುತ್ತಾರೆ. ಆದರೆ ಒಂದಿಲ್ಲೊಂದು ರೀತಿಯಲ್ಲಿ ಎಲ್ಲರೂ ಸೀಗಲ್ ನಂತೆ ಬೇಟೆಯಾಡಲ್ಪಡುತ್ತಾರೆ. ಹೀಗೆ ಶೀರ್ಷಿಕೆಯೇ ರೂಪಕವಾಗುವ ವಿಶಿಷ್ಟ ನಾಟಕ ‘ಸೀಗಲ್’ ಹಾಗೆಂದು ಸೀಗಲ್ ಕೇವಲ ಪ್ರೀತಿಯ ಕುರಿತಾದ ನಾಟಕವಲ್ಲ. ನಾಟಕಕ್ಕೆ ಇನ್ನೊಂದು ಆಯಾಮವಿದೆ. ಅದು ಸೃಜನಶೀಲತೆಯ ಕುರಿತಾದದ್ದು. ನಾಟಕದ ಆರಂಭದಲ್ಲಿ ಕಾಣುವ ತ್ರೆಪ್ಲೆಫ್ ರಚಿಸಿದ ನಾಟಕದ ಮೂಲಕ ಇದು ಕಾಣಿಸಿಕೊಳ್ಳುತ್ತದೆ. ಅವನು ಮಹತ್ವಾಕಾಂಕ್ಷಿ. ತನ್ನ ನಾಟಕ ಎಲ್ಲರಿಂದಲೂ ಪ್ರಶಂಸೆಗೊಳಗಾಗುತ್ತದೆ ಎಂಬ ಕನಸನ್ನು ಕಟ್ಟಿಕೊಂಡವನು. ಆದರೆ ಅವನು ಲೇವಡಿಗೊಳಗಾಗುತ್ತಾನೆ ಮತ್ತು ಹತಾಶನಾಗುತ್ತಾನೆ. ತ್ರಿಗೊರಿನ್ ಈ ಎಲ್ಲ ಹಂತಗಳನ್ನು ದಾಟಿದವನಾಗಿದ್ದಾನೆ. ಒಟ್ಟಿನಲ್ಲಿ ಸೃಷ್ಟಿಕ್ರಿಯೆಯಲ್ಲಿ ಉಂಟಾಗುವ ನೋವು, ಯಾತನೆಗಳಿಗೆ ನಾಟಕ ಸಾಕ್ಷಿಯಾಗುತ್ತದೆ. ಚೆಕಾಫ್‌ನ ಮೂಲಕೃತಿಯ ಸಾರ್ವಕಾಲಿಕ ಪ್ರಸ್ತುತತೆ ಈ ಅನುವಾದವನ್ನು ಸಾರ್ಥಕವಾಗಿಸಿದೆ. ನಾಟಕವನ್ನು ವೇದಿಕೆಯ ಮೇಲೆ ನೋಡಿ ಆನಂದಿಸುವಷ್ಟೇ ಸರಾಗವಾಗಿ ಹೇಮಾ ಪಟ್ಟಣಶೆಟ್ಟಿಯವರ ಅನುವಾದವೂ ಖುಷಿಯಿಂದ ಓದಿಸಿಕೊಂಡು ಹೋಗುವ ಸುಂದರ ಶೈಲಿಯಲ್ಲಿದೆ. ಹೆಚ್.ಎಸ್. ಉಮೇಶ್ ಅವರ ವಿದ್ವತ್ಪೂರ್ಣ ಮುನ್ನುಡಿಯಲ್ಲಿ ನಾಟಕದ ಅನುವಾದ ಹೇಗಿರಬೇಕೆಂಬುದರ ಬಗ್ಗೆ ಅನೇಕ ವಿಚಾರಗಳ ಚರ್ಚೆಯಿದೆ. ************************************************************ ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

ಕಾವ್ಯಯಾನ

ನಿನ್ನಿರುವು..

ಕವಿತೆ ನಿನ್ನಿರುವು.. ವೀಣಾ ಪಿ. ನೀನಂದುನನ್ನಮುಡಿಗಿಟ್ಟುಕೊಳಲೆಂದುನಿನ್ನೊಲವಿನಉದ್ಯಾನದಿಂದೆನ್ನಕೈಗಿತ್ತಗುಲಾಬಿಯನುನಾನುಎದೆಗೊತ್ತಿಹೊತ್ತಿಗೆಯಲಿಅವಿತಿಟ್ಟುದಶ ವಸಂತಗಳುರುಳಿನಮ್ಮಿಬ್ಬರ ನಡುವೆತಲುಪಲಾಗದಭುವಿ-ಬಾನಿನಂತರವುಹರವಿಯೂಮಾಸಿಲ್ಲಅದೇಸಮ್ಮೋಹನದೊಲವುಸವಿಪ್ರೇಮ ಪ್ರೇರಣೆಯಕಡುಕೆಂಪಿನಿರುವುಅರಳಲೆಳಸಿಯೂಅರಳದುಳಿದಮೊಗ್ಗಿನಲಿಅಂದಿನಂತೆಯೇ ಇಂದೂ..ನನ್ನ ನವಿರುಭಾವದಾಂತರ್ಯದಲಿನಿನ್ನಿರುವಿನಂತೆ..!! *******************************

ನಿನ್ನಿರುವು.. Read Post »

ಕಾವ್ಯಯಾನ

ಝೆನ್ ಕವಿತೆಗಳು

ಕವಿತೆ ಝೆನ್ ಕವಿತೆಗಳು ಹುಳಿಯಾರ್ ಷಬ್ಬೀರ್ 01 ನನ್ನದು..ತಾತ್ಸಾರದ ಮೌನವಲ್ಲಏಕಾಕಿತನದ ಮೌನವಲ್ಲಉಡಾಫೆಯ ಮೌನವಲ್ಲನಿರರ್ಥಕ ಮೌನವಲ್ಲಸಂಚಿನ ಮೌನವಲ್ಲಶ್ರದ್ಧೆಯ ಮೌನವಲ್ಲಧಿಕ್ಕರಿಸುವ ಮೌನವಲ್ಲಬುದ್ಧನ ಮುಖದ ಮೇಲಿನಪ್ರಶಾಂತವಾದ ಮೌನದ ಮೌನ. 02 ಶುದ್ಧೋಧನತಂದೆಯಾದರೂಬುದ್ಧನ ಕಾಲಿಗೆರಗಿಶುದ್ಧನಾದ ಬದ್ಧನಾದ. 03 ತುಂಬಿದ ಕೊಳದಲ್ಲಿನಅವನ ಪ್ರತಿಬಿಂಬಅಣಕಿಸುತಿತ್ತುನಿನ್ನಾತ್ಮ…?ಸತ್ತಿದೆ ಎಂದುಕೆಣಕುತಿತ್ತು. 04 ಬುದ್ಧ ನಿನ್ನನಿದ್ದೆಯ ಕದ್ದಿದ್ದುವೈರಾಗ್ಯದಾಸೆಯಮೆಟ್ಟಿಲು. 05 ಬಿಕ್ಕುಗಳೇಚರಿಗೆಗೆ ಹೋಗುವುದುಹೊಟ್ಟೆ ತುಂಬಿಸಿಕೊಳ್ಳುವುದಕ್ಕಲ್ಲಬದುಕಿನ ಅನಾವರಣಕ್ಕೆ ಅರ್ಥಅರ್ಥೈಯಿಸಲು. **************************

ಝೆನ್ ಕವಿತೆಗಳು Read Post »

ಕಾವ್ಯಯಾನ

ಕೇಳಬೇಕಿತ್ತು..!

ಕವಿತೆ ಕೇಳಬೇಕಿತ್ತು..! ಮುತ್ತು ಬಳ್ಳಾ ಕಮತಪುರ ಸಾವಿನ ಮುನ್ನ ನನ್ನಹೇಳಿಕೆ ದಾಖಲಿಸಿಬೇಕಿತ್ತು …..ತಿರುವು ಮುರು ಮಾಡಿನನ್ನ ಸಾವನ್ನೇ ದಾಖಲಿಸಿದರು ..!ಅವರ ಪೆನ್ನಿನ ನಿಬ್ಬು ಮುರಿದಿತ್ತು… ಕೇಳಬೇಕಿತ್ತುಆಗ ನನ್ನ ಮಾತುಗಳುತೊದಲು ನುಡಿಯಾಗಿ ಕಂಡಿತ್ತುಏನು ಹೇಳಬೇಕಿತ್ತು …?ಅಲ್ಲಿ ಮೊದಲೇ ಹೊಂದಾಣಿಕೆಮಾಡಿಕೊಂಡು ಸಾವಿನೊಂದಿಗೆಅಂತ್ಯಗೊಂಡಿತು….. ಸತ್ತವಳು ನಾನಲ್ಲ ,ಸತ್ತವರು ವ್ಯವಸ್ಥೆಯಲ್ಲಿಇದ್ದು ಮಾತನಾಡದ ನೀವುಗಳುಅಸಹಾಯಕಳ ಮೊರೆ ಆಲಿಸಲುಸರ್ವಸಂಗ ಪರಿತ್ಯಾಗಿಗೂ ಮನಸಿಲ್ಲ…ಇನ್ನೂ ಎಲ್ಲಿಯ ರಾಮರಾಜ್ಯ….. ಸತ್ತ ಮೇಲೆ ಆದರೂಅರಿಸಿಣವಾದರೂ ಹಚ್ಚಿದಫನ್ ಮಾಡಬೇಕಿತ್ತುಹಂಚಿ ತಿಂದ ನನ್ನ ದೇಹಸಾಕ್ಷಿ ನೆಪದಲಿ ಮುಟ್ಟಿದಕೈಗಳು ನಂಜಾಗಬಾರದುಅಲ್ಲವೇ….! ಮೊಂಬತ್ತಿ ಹಚ್ಚಬೇಡಿಕರಗಿದಂತೆ ..!ನಾಳೆ‌ ದಿನ ದೀಪ‌ ಹಚ್ಚುವಕೈ ಬಳೆಗಳಸದ್ದು ಕೇಳದಾಗುತ್ತದೆ… ************************************

ಕೇಳಬೇಕಿತ್ತು..! Read Post »

You cannot copy content of this page

Scroll to Top