ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅನುವಾದ

ಅನುವಾದ ಬರಹ ರಘುಪತಿ ಸಹಾಯ್ ಫಿರಾಖ್ ಗೋರಖ್ ಪುರಿ ಕವಿತೆ ರಘುಪತಿಸಹಾಯ್ ಫಿರಾಖ್ ಗೋರಖ್ಪುರಿ ಇವರು ಪ್ರಮುಖ ಉರ್ದುಕವಿಗಳು. ಸಾಹಿರ್ಲೂದಿಯಾನ್ವಿ,ಮಹಮ್ಮದ್ಇಕ್ಬಾಲ್‍‍ರಂತಹ ಅನೇಕ ಹೆಸರಾಂತ ಉರ್ದುಕವಿಗಳಿದ್ದ ಕಾಲದಲ್ಲಿಇವರುಉತ್ತಮಉರ್ದುಕವಿಗಳಾಗಿಪ್ರಸಿದ್ಧಿಪಡೆದರು. ಇವರ ಬೃಹತ್ಕವನಸಂಕಲನ ಗುಲ್-ಏ-ನಗ್ಮಾಕ್ಕೆ ಜ್ಞಾನಪೀಠಪ್ರಶಸ್ತಿಯುದೊರೆಯಿತು. ಇಲ್ಲಿಅನುವಾದಗೊಂಡ ಕವಿತೆಗಳು ಗಜಲುಗಳಂತೆ ಕಂಡರೂ ಗಜಲುಗಳಲ್ಲ. ಇವುಕಾವ್ಯಕಾರಣದಲ್ಲಿಬಂದವು ಕನ್ನಡಕ್ಕೆ ಅನುವಾದಿಸಿದವರು: ಆರ್.ವಿಜಯರಾಘವನ್ ಇಂದು ಸಹ ಪ್ರೀತಿಯ ಕಾರವಾನ್ ಇಂದೂ ಈಪ್ರೀತಿಯ ಕಾರವಾನ್ ಹಾದುಹೋಗುತ್ತಿದೆಈ ಮೈಲು ಮತ್ತು ಈ ಮೈಲಿಗಲ್ಲನ್ನು ಯಾವತ್ತಿನಂತೆ ನಿಮ್ಮ ದುಃಖ ಈ ಜಗತ್ತಿನಲ್ಲಿದ್ದ ಎಂದಿನ ದುಷ್ಟ ವಿಷಯವಾಗಿದೆನಮ್ಮ ಕಥೆಯನ್ನು ಇತರರು ಹೇಳುತ್ತಿದ್ದಾರೆಅದೇ ಮೊದಲಿನಂತೆ ಗುರಿಗಳುಧೂಳಿನಂತೆಹಾರಿಹಾರಿ ಹೋಗುತ್ತಲಿವೆಹಾದುಹೋಗುವಲೋಕದರೀತಿಯೂಮೊದಲಿನಂತೆ ಕತ್ತಲೆಯಲ್ಲಿಬೆಳಕಿನಲ್ಲಿಪ್ರೀತಿಏನನ್ನೂಕಾಣಲಿಲ್ಲಸಂಜೆಬೆಳಕಿನಪರಿಣಾಮವಿದೆಇಂದಿಗೂಮೊದಲಿನಂತೆ ಈ ಬದುಕಿನಲ್ಲಿ ಬದುಕ ಒಟ್ಟುಗೂಡಿಸುವಿಕೆ ಪರಿಣಾಮರಹಿತವಾಗಿದೆಭಾರದುಬಾರಿ ಮಧುಕುಡಿಕೆಗಳ ಕುರಿತ ಗೌಜುಗದ್ದಲವಿದೆ ಮೊದಲಿನಂತೆ ಸಾವಿರಸಾವಿರ ಹಿಂಸೆ ದಬಾವಣಿಕೆಯ ಕಾರ್ಯಗಳಮಾಡುಸಾವಿರಗಟ್ಟಲೆ ಬದ್ಧತೆಯ,ದಯೆಯ ಸತ್ಕಾರ್ಯಗಳಮಾಡುಗೆಳೆಯನೇ! ನಿನ್ನ ಕುರಿತ ಶಂಕೆ ಅನುಮಾನಗಳು ಉಳಿವವು ಮೊದಲಿನಂತೆ ಇಂದು, ಮತ್ತೆ, ಪ್ರೀತಿಬೇರ್ಪಟ್ಟಿದೆಎರಡುಲೋಕಗಳಿಂದಜಗತ್ತನ್ನುತೋಳುಗಳಲ್ಲಿಬಿಗಿದಪ್ಪಿದ್ದವಳುಇರುವಳೇಮೊದಲಿನಂತೆ ಖಿನ್ನತೆಗೆಸಂದ ಪ್ರೀತಿಇಂದಿಗೂಅತಿಖಿನ್ನತೆಗೆಒಳಗಾಗಿಲ್ಲಕಾಣದಂಥಸುಡುವಿಕೆಯಸಣ್ಣಪರಿಣಾಮವುಇದೆಮೊದಲಿನಂತೆ ಸಾಮೀಪ್ಯವುಕಡಿಮೆಯಿಲ್ಲ, ದೂರವಿರುವಿಕೆಯುಹೆಚ್ಚಿಲ್ಲಆದರೆಇಂದು, ಅನ್ಯೋನ್ಯತೆಯಅರ್ಥವಿರುವುದಾದರೂಎಲ್ಲಿಮೊದಲಿನಂತೆ ಸ್ಫಟಿಕಮಣಿಯಲ್ಲಿಅತಿಸೂಕ್ಷ್ಮಲೋಪವನುನೀನಗೆನೋಡಲುಸಾಧ್ಯಸ್ಫಟಿಕಮಣಿಯಕಲಾಕಾರನೇ, ಹೇಳು, ನನ್ನಹೃದಯವಿರುವುದೇಮೊದಲಿನಂತೆ ಒಮ್ಮೆಕಾಮಕ್ಕೆಅಜಾಗರೂಕತೆಯಿಂದಬದುಕನ್ನೊಪ್ಪಿಸಿದರೂಲಾಭನಷ್ಟದಸಮಸ್ಯೆಉಳಿದೇ ಇರುವುದುಮೊದಲಿನಂತೆ ಇಂದೂಕೊಲ್ಲುವಸೌಂದರ್ಯವಿರುವುದುಪ್ರೀತಿಬೇಟೆಯಾಡುವನೆಲದಲ್ಲಿತನ್ನ ಕಮಾನುಹುಬ್ಬನ್ನುಒಯ್ಯಲೊಯ್ಯುತ್ತಮೊದಲಿನಂತೆ ನಿಮ್ಮಪ್ರಕಾಂಡಪ್ರವಚನದಕಣ್ಣುಮಾತನಾಡಲುಪ್ರಾರಂಭಿಸಿತುಆಅಭಿವ್ಯಕ್ತಿಯಸೌಂದರ್ಯಮಾಂತ್ರಿಕತೆ ಈಗಲೂಇರುವವಾ ಮೊದಲಿನಂತೆ ಓಫಿರಾಕ್, ಸುಡುವಹೃದಯದಕಪ್ಪುವಿಧಿಯಂತಹಅದೃಷ್ಟವುಮಸುಕಾಗುವುದಿಲ್ಲಈದಿನಮೋಂಬತ್ತಿಯಮೇಲ್ಭಾಗದಲ್ಲಿಹೊಗೆಇದೆ, ಮೊದಲಿನಂತೆ.

Read Post »

ಅಂಕಣ ಸಂಗಾತಿ, ಸಂಪ್ರೋಕ್ಷಣ

ಅಂಕಣ ಬರಹ ಬಸ್ ಸ್ಟ್ಯಾಂಡೆನ್ನುವ ಮಾಯಾಲೋಕ ಚಲನೆ ಎನ್ನುವ ಪದದ ನಿಜವಾದ ಅರ್ಥವೇನೆಂದು ತಿಳಿಯಬೇಕಾದರೆ ಈ ಬಸ್ ಸ್ಟ್ಯಾಂಡಿನಲ್ಲಿ ಅರ್ಧ ಗಂಟೆ ಸುಮ್ಮನೆ ನಿಂತುಬಿಡಬೇಕು; ಅವಸರದಲ್ಲಿ ಅತ್ತಿತ್ತ ಓಡಾಡುತ್ತ ಬೋರ್ಡು ಹುಡುಕುವವರನ್ನು, ಕಂಟ್ರೋಲ್ ರೂಮಿನಿಂದ ಅಶರೀರವಾಣಿಯಂತೆ ಮೊಳಗುವ ಅನೌನ್ಸ್‌ಮೆಂಟಿಗೆ ಬ್ಯಾಗನ್ನೆತ್ತಿಕೊಂಡು ಬಸ್ಸಿನೆಡೆಗೆ ಓಡುವವರನ್ನು, ಒಂದು ನಿಮಿಷವೂ ಆಚೀಚೆಯಾಗದಂತೆ ಅದೆಲ್ಲಿಂದಲೋ ಓಡಿಬಂದು ಹೊರಡುತ್ತಿರುವ ಬಸ್ಸನ್ನು ಹತ್ತಿಕೊಳ್ಳುವವರನ್ನು ಸಹನೆಯಿಂದ ಗಮನಿಸಬೇಕು! ಬಸ್ಸಿನ ಹಾಗೂ ಅದರ ಚಲನೆಯ ಹೊರತಾಗಿ ಬೇರಾವ ವಿಷಯಗಳೂ ಆ ಕ್ಷಣದ ಅಲ್ಲಿನ ಬದುಕುಗಳ ಎಣಿಕೆಗೆ ಸಿಕ್ಕುವುದಿಲ್ಲ. ಭೂಮಿ ಸೂರ್ಯನನ್ನು ಪರಿಭ್ರಮಿಸುವ, ಇನ್ಯಾವುದೋ ಉಪಗ್ರಹವೊಂದು ಭೂಮಿಯನ್ನು ಸುತ್ತುತ್ತಿರುವ ಯಾವುದೇ ನಿರ್ಣಯಾತ್ಮಕ ತತ್ವಗಳಿಗೆ ಒಳಪಡದ ಸರಳವಾದ ಚಲನೆಯ ಸಿದ್ಧಾಂತವೊಂದು ಬಸ್ಸಿನ ಅಸ್ತಿತ್ವದೊಂದಿಗೆ ನಿರ್ಣಯಿಸಲ್ಪಡುತ್ತದೆ. ಬಸ್ಸು ಯಾವ ಸಮಯಕ್ಕೆ ಬಸ್ ಸ್ಟ್ಯಾಂಡನ್ನು ತಲುಪಿತು, ಅದರ ಬೋರ್ಡು ಯಾವಾಗ ಬದಲಾಯಿತು, ಅದರ ನಿರ್ಗಮನಕ್ಕೆ ನಿಗದಿಯಾದ ಅವಧಿಯೇನು ಹೀಗೆ ಸಮಯದ ಸುತ್ತ ಸುತ್ತುವ ಮಾಹಿತಿಗಳೇ ಅತ್ತಿತ್ತ ಸುಳಿದು ಚಲನೆಯ ದಿಕ್ಕುಗಳನ್ನು ನಿರ್ಧರಿಸುತ್ತಿರುತ್ತವೆ. ಅಂತಹ ನಿರ್ಣಾಯಕ ಹಂತದಲ್ಲಿ ಬಸ್ ಸ್ಟ್ಯಾಂಡೊಂದು ಪುಟ್ಟ ಗ್ರಹದಂತೆ ಗೋಚರವಾಗಿ, ತನ್ನ ನಿಯಮಗಳಿಗನುಸಾರವಾಗಿ ಬದುಕುಗಳ ಚಲನೆಯ ಬೋರ್ಡನ್ನು ಬದಲಾಯಿಸುತ್ತಿರುವಂತೆ ಭಾಸವಾಗುತ್ತದೆ.           ನಾನು ಬಸ್ಸಿಗಾಗಿ ಕಾಯುತ್ತ ನಿಂತಿರುತ್ತಿದ್ದ ಕಾಲದಲ್ಲಿ ಈ ಬಸ್ಸಿನ ಬೋರ್ಡುಗಳೆಡೆಗೆ ನನಗೊಂದು ವಿಚಿತ್ರವಾದ ಕುತೂಹಲವಿತ್ತು. ಬೋರ್ಡೇ ಇರದ ಬಸ್ಸೊಂದು ತುಂಬಾ ಸಮಯದಿಂದ ಸ್ಟ್ಯಾಂಡಿನಲ್ಲಿಯೇ ನಿಂತಿದೆಯೆಂದರೆ ಅದು ಡಿಪೋಗೆ ಹೋಗುವ ಬಸ್ಸು ಎಂದು ಅದ್ಹೇಗೋ ತೀರ್ಮಾನವಾಗಿ ಆ ಬಸ್ಸಿನ ನಂಬರನ್ನಾಗಲೀ, ಅದರ ಆಗುಹೋಗುಗಳನ್ನಾಗಲೀ ಯಾರೂ ಗಮನಿಸುತ್ತಲೇ ಇರಲಿಲ್ಲ; ಡ್ರೈವರೊಬ್ಬ ಆ ಬಸ್ಸಿನೆಡೆಗೆ ನಡೆದುಕೊಂಡು ಹೋಗುತ್ತಿದ್ದರೂ ಅಲ್ಲಿರುವ ಯಾರ ಗಮನವೂ ಅದರ ಕಡೆಗೆ ಹರಿಯುತ್ತಿರಲಿಲ್ಲ. ಅದೇ ಬೋರ್ಡು ಹಾಕುವವ ಬಸ್ಸಿನೆಡೆಗೆ ಚಲಿಸಿದಾಗ ಮಾತ್ರ ಅಲ್ಲಿರುವವರೆಲ್ಲರ ದೃಷ್ಟಿಯೂ ಅವನನ್ನೇ ಅನುಸರಿಸುತ್ತ ತೀಕ್ಷ್ಣವಾಗತೊಡಗುತ್ತಿತ್ತು. ಅಷ್ಟು ಹೊತ್ತು ಅಲ್ಲಿಯೇ ನಿಂತಿರುತ್ತಿದ್ದ ಬಸ್ಸಿನ ಅಸ್ತಿತ್ವಕ್ಕೊಂದು ಬೆಲೆಯೇ ಇಲ್ಲದಂತೆ ಭಾಸವಾಗಿ, ನಾಲ್ಕಾರು ಅಕ್ಷರಗಳ ಬೋರ್ಡೊಂದು ನಿಮಿಷಾರ್ಧದಲ್ಲಿ ಅದರ ಇರುವಿಕೆಯ ಸ್ವರೂಪವನ್ನು ಬದಲಾಯಿಸಿಬಿಡುವುದನ್ನು ನೋಡಿ ನನಗೆ ಆಶ್ಚರ್ಯವಾಗುತ್ತಿತ್ತು. ಈ ಬೋರ್ಡುಗಳೆಲ್ಲ ಅದ್ಯಾವ ಫ್ಯಾಕ್ಟರಿಯಲ್ಲಿ ತಯಾರಾಗಬಹುದು, ಅದರ ಮೇಲೆ ಅಕ್ಷರಗಳನ್ನು ಬರೆಯುವವ ಯಾವ ಊರಿನವನಾಗಿರಬಹುದು, ತಾನೇ ಬರೆದ ಬೋರ್ಡನ್ನು ಹೊತ್ತು ಹೊರಡಲು ರೆಡಿಯಾದ ಬಸ್ಸನ್ನೇರುವಾಗ ಅವನ ಮನಸ್ಸಿನ ಭಾವನೆಗಳೇನಿರಬಹುದು ಎನ್ನುವಂತಹ ವಿಚಿತ್ರವಾದ ಆಲೋಚನೆಗಳೂ ಆಗಾಗ ಸುಳಿಯುತ್ತಿದ್ದವು. ಕಂಟ್ರೋಲ್ ರೂಮಿನ ಪಕ್ಕ ಒಂದಕ್ಕೊಂದು ಅಂಟಿಕೊಂಡು ನಿಂತಿರುತ್ತಿದ್ದ ಬೋರ್ಡುಗಳಲ್ಲಿ ತನಗೆ ಬೇಕಾಗಿದ್ದನ್ನು ಮಾತ್ರ ಎತ್ತಿಕೊಂಡು ವಿಚಿತ್ರವಾದ ಗತ್ತಿನಲ್ಲಿ ಓಡಾಡುತ್ತಿದ್ದ ಬೋರ್ಡು ಹಾಕುವವನೇ ಸ್ಟ್ಯಾಂಡಿನಲ್ಲಿ ಕಾಯುತ್ತಿರುವವರೆಲ್ಲರ ಬದುಕಿನ ಚಲನೆಯನ್ನು ನಿರ್ಧರಿಸುತ್ತಿರುವಂತೆ ಭಾಸವಾಗುತ್ತಿತ್ತು.           ಈ ಕಂಟ್ರೋಲ್ ರೂಮ್ ಎನ್ನುವುದೊಂದು ಮಾಯಾಲೋಕದ ಕಲ್ಪನೆಯನ್ನು ಕಣ್ಣೆದುರು ತೆರೆದಿಡುವ ಜಾಗ. ಅಸಾಧಾರಣವಾದ ಲವಲವಿಕೆಯ ಆ ಸ್ಥಳದಲ್ಲಿ ನಡೆಯುವ ಮಾತುಕತೆಗಳು, ಅದ್ಯಾವುದೋ ಗುರುತು-ಪರಿಚಯಗಳಿಲ್ಲದ ಊರಿನಲ್ಲಿ ಸಂಜೆಯ ಹೊತ್ತು ನಡೆದ ಘಟನೆಗಳನ್ನು ತಮ್ಮದಾಗಿಸಿಕೊಂಡ ಜೋಕುಗಳು, ಬಸ್ಸಿನ ಆಗಮನವನ್ನೇ ಕಾಯುತ್ತಿರುವಂತೆ ತೋರುವ ಬಾಯಿಪಾಠದಂತಹ ಅನೌನ್ಸ್‌ಮೆಂಟುಗಳು ಎಲ್ಲವೂ ಸೇರಿಕೊಂಡು ಅಲ್ಲೊಂದು ವಿಶಿಷ್ಟವಾದ ಜೀವಂತಿಕೆಯ ಸಂವಹನವೊಂದು ಪ್ರತಿನಿಮಿಷವೂ ಹುಟ್ಟಿಕೊಳ್ಳುತ್ತಿರುತ್ತದೆ. ರೂಮಿನ ಒಳಹೋಗುತ್ತಿರುವ ಡ್ರೈವರಿನೊಂದಿಗೆ ಹೊರಬರುತ್ತಿರುವ ಕಂಡಕ್ಟರ್ ಒಬ್ಬ ಮುಖಾಮುಖಿಯಾಗಿ, ಬಾಗಿಲಿನಲ್ಲಿ ನಗುವೊಂದರ ವಿನಿಮಯವಾಗಿ, ಯಾರೋ ನಿರ್ಧರಿಸಿದ ಚಲನೆಯೊಂದು ಪರಿಚಯವೇ ಇಲ್ಲದ ಇಬ್ಬರ ನಗುವಿನಲ್ಲಿ ಸಂಧಿಸುತ್ತಿರುವಂತೆ ಅನ್ನಿಸುತ್ತದೆ. ಬೆಂಚಿನ ಮೇಲೆ ಬಸ್ಸಿಗಾಗಿ ಕಾಯುತ್ತ ಕುಳಿತಿದ್ದ ಶಾಲೆಗೆ ಹೋಗುವ ಮಗುವೊಂದು ಎದ್ದುಬಂದು, ಕಂಟ್ರೋಲ್ ರೂಮಿನ ಸರಳುಗಳನ್ನು ಹಿಡಿದುಕೊಂಡು ತಲೆ ಮೇಲೆತ್ತಿ ಬಸ್ಸಿನ ನಂಬರನ್ನು ವಿಚಾರಿಸುವಾಗಲೆಲ್ಲ ಕಾರಣವಿಲ್ಲದೆ ಆ ಮಗುವಿನ ಮೇಲೊಂದು ಪ್ರೀತಿ ಹುಟ್ಟಿಕೊಳ್ಳುತ್ತದೆ. ಪಡ್ಡೆ ಹುಡುಗರೆಡೆಗೆ ಒಂದು ಅಸಡ್ಡೆಯನ್ನು ತೋರಿಸುವ ಕಂಟ್ರೋಲ್ ರೂಮಿನ ಯಜಮಾನ ಮಗುವಿನ ಪ್ರಶ್ನೆಗೆ ನಗುನಗುತ್ತ ಉತ್ತರಿಸುವಾಗ, ಸರಳುಗಳ ಒಳಗೆ ಕುಳಿತೇ ಇರುವ ಮಾನವೀಯ ಧ್ವನಿಯೊಂದು ಸರಳುಗಳಾಚೆ ಹರಿದು ಕಾಯುವಿಕೆಯ ಅಸಹನೆಗಳೆಲ್ಲವನ್ನೂ ಕಡಿಮೆ ಮಾಡುತ್ತದೆ. ಬಾಗಿಲನ್ನೇ ಮುಚ್ಚದ ಕಂಟ್ರೋಲ್ ರೂಮಿನ ಗೋಡೆಯ ಮೇಲಿನ ದೊಡ್ಡ ಗಡಿಯಾರವೊಂದು ಬಾಗಿಲಿನಲ್ಲಿ, ಮೈಕಿನಲ್ಲಿ, ಸರಳುಗಳ ಸಂದಿಗಳಲ್ಲಿ ಸಂಧಿಸುವ ಸಂವಹನಗಳ ಸಮಯವನ್ನು ತನ್ನದಾಗಿಸಿಕೊಳ್ಳುತ್ತ ಚಲಿಸುತ್ತಲೇ ಇರುತ್ತದೆ.           ಬಸ್ ಸ್ಟ್ಯಾಂಡೊಂದು ತನ್ನೊಳಗಿನ ಚುರುಕುತನವನ್ನು ಕಂಪೌಂಡಿನಾಚೆಯೂ ವಿಸ್ತರಿಸಿಕೊಳ್ಳುವ ರೀತಿ ಅಚ್ಚರಿ ಹುಟ್ಟಿಸುವಂಥದ್ದು. ನಾಲ್ಕೇ ಅಡಿಗಳ ಜಾಗದಲ್ಲಿ ಅಕ್ಕಪಕ್ಕದವರಿಗೆ ಒಂದು ಹನಿಯೂ ಸಿಡಿಯದಂತೆ ಎಳನೀರು ಕತ್ತರಿಸುವವನ ಪಕ್ಕದ ಮೂರಡಿಯಲ್ಲಿ ಹೂ ಮಾರುವವನ ಬುಟ್ಟಿ, ಹಣ್ಣಿನ ಅಂಗಡಿಯೊಂದಿಗೆ ಅಂಟಿಕೊಂಡಂತೆ ಕಾಣುವ ಜ್ಯೂಸ್ ಪಾರ್ಲರು, ಜೊತೆಗೊಂದು ಬೀಡಾ ಅಂಗಡಿಯ ರೇಡಿಯೋ ಸೌಂಡು, ಸಂಜೆಯಾಗುತ್ತಿದ್ದಂತೆ ಬೇಕರಿಯ ಗಾಜಿನ ಬಾಕ್ಸುಗಳ ಮೇಲೆ ಹಾಜರಾಗುವ ಬೋಂಡಾ-ಬಜ್ಜಿಗಳೆಲ್ಲವೂ ಬಸ್ ಸ್ಟ್ಯಾಂಡಿನ ಲೋಕದೊಂದಿಗೆ ಒಂದಾಗಿಹೋಗಿ ಸೌಂದರ್ಯಪ್ರಜ್ಞೆಯ ಹೊಸದೊಂದು ಪರಿಕಲ್ಪನೆಯನ್ನು ಹುಟ್ಟುಹಾಕುತ್ತವೆ. ಬಸ್ಸಿನ ಓಡಾಟದಿಂದಾಗಿ ನೆಲಬಿಟ್ಟು ಮೇಲೆದ್ದ ಬೇಸಿಗೆಯ ಧೂಳಾಗಲೀ, ಮಳೆಗಾಲದ ರಾಡಿಯಾಗಲೀ, ಬೇಕರಿಯ ಚಹಾದ ಕಪ್ಪನ್ನು ಮುತ್ತಿಕೊಳ್ಳುವ ನೊಣಗಳಾಗಲೀ ಆ ಸೌಂದರ್ಯದ ಭಾವವನ್ನು ಕೊಂಚವೂ ಅಲ್ಲಾಡಿಸುವುದಿಲ್ಲ. ಬೇಕರಿಯೆದುರು ನಿಂತಿರುವ ಕಾಲೇಜು ಹುಡುಗರ ಗ್ಯಾಂಗೊಂದು ಜ್ಯೂಸು ಕುಡಿಯುತ್ತಿರುವ ಹುಡುಗಿಯರೆಡೆಗೆ ಕಳ್ಳದೃಷ್ಟಿ ಬೀರುವ ಅಪ್ರತಿಮ ನೋಟಕ್ಕೆ ಸಾಲುಸಾಲು ಅಂಗಡಿಗಳ ಪಕ್ಕದಲ್ಲಿ ನಿಧಾನವಾಗಿ ಚಲಿಸುವ ಬಸ್ಸು ಸಾಕ್ಷಿಯಾಗುತ್ತದೆ. ಆ ಸಾಲು ಅಂಗಡಿಗಳ ನಡುವೆಯೇ ಅಲ್ಲೊಂದು ಇಲ್ಲೊಂದು ಪ್ರೇಮವೂ ಮೊಳಕೆಯೊಡೆದು ಕಳ್ಳಹೆಜ್ಜೆಗಳನ್ನಿಡುತ್ತ ಬಸ್ ಸ್ಟ್ಯಾಂಡಿನೆಡೆಗೆ ಚಲಿಸುತ್ತದೆ. ಹಾಗೆ ಚಿಗುರಿದ ಒಲವೊಂದು ಅದೇ ಬಸ್ ಸ್ಟ್ಯಾಂಡಿನ ಬೆಂಚುಗಳ ಮೇಲೆ ಬೆಳೆದು, ಬದಲಾದ ಬೋರ್ಡಿನ ಬಸ್ಸನ್ನೇರಿ ತಂಟೆ-ತಕರಾರುಗಳಿಲ್ಲದೆ ಊರು ಸೇರಿ ಬೇರೂರುತ್ತದೆ.           ಈ ಬಸ್ ಸ್ಟ್ಯಾಂಡುಗಳಲ್ಲಿ ಹುಟ್ಟಿಕೊಳ್ಳುವ ಅನುಬಂಧಗಳ ಬಗ್ಗೆ ವಿಚಿತ್ರವಾದ ಆಸಕ್ತಿಯೊಂದು ನನ್ನಲ್ಲಿ ಈಗಲೂ ಉಳಿದುಕೊಂಡಿದೆ. ಸ್ಟ್ಯಾಂಡಿಗೆ ಬಂದ ಪ್ರತಿಯೊಂದು ವಿದ್ಯಾರ್ಥಿಯನ್ನೂ ಸಮಯಕ್ಕೆ ಸರಿಯಾಗಿ ಕಾಲೇಜು ತಲುಪಿಸುವುದು ತಮ್ಮ ಗುರುತರವಾದ ಜವಾಬ್ದಾರಿಯೆನ್ನುವಂತೆ ಹಾಜರಾಗುತ್ತಿದ್ದ ಸಿಟಿ ಬಸ್ಸಿನ ಡ್ರೈವರು-ಕಂಡಕ್ಟರುಗಳನ್ನು ಕಂಡಾಗ ಆಗುತ್ತಿದ್ದ ನೆಮ್ಮದಿ-ಸಮಾಧಾನಗಳ ಅನುಭವವನ್ನು ಜಗತ್ತಿನ ಬೇರಾವ ಸಂಗತಿಯೂ ದೊರಕಿಸಿಕೊಟ್ಟ ನೆನಪಿಲ್ಲ. ಬಸ್ಸಿಗಾಗಿ ಕಾಯುತ್ತಿದ್ದ ಸಮಯದಲ್ಲಿ ಡಿಪೋಗೆ ಹೋಗಲೆಂದು ನಿಂತಿರುತ್ತಿದ್ದ ಖಾಲಿ ಬಸ್ಸಿನೊಳಗೆ ಕುಳಿತು, ಬೇರೆ ಕಾಲೇಜಿನ ಹುಡುಗಿಯರೊಂದಿಗೆ ಮಾಡುತ್ತಿದ್ದ ಕಾಲಕ್ಷೇಪದ ಮಾತುಕತೆಯ ಭಾಗವಾಗುತ್ತಿದ್ದ ಹುಡುಗರ ಚಹರೆಗಳು ನೆನಪಿನಿಂದ ಮರೆಯಾಗುವುದಿಲ್ಲ. ಆ ಗ್ಯಾಂಗಿನಲ್ಲಿದ್ದ ಹುಡುಗನೊಬ್ಬನ ಮೇಲೆ ಚಿಕ್ಕದೊಂದು ಪ್ರೇಮವೂ ಹುಟ್ಟಿ, ಆತನ ಬಸ್ಸು ಹೊರಟುಹೋಗುವ ಸಮಯದಲ್ಲಿ ಕದ್ದುನೋಡುತ್ತಿದ್ದಾಗ, ಅಚಾನಕ್ಕಾಗಿ ಆತನೂ ತಿರುಗಿನೋಡಿ ಸೃಷ್ಟಿಯಾಗುತ್ತಿದ್ದ ನೈಜವಾದ ರೋಮಾಂಚಕ ದೃಶ್ಯವೊಂದು ಯಾವ ಸಿನೆಮಾದಲ್ಲಿಯೂ ಕಾಣಿಸಿಕೊಂಡಿಲ್ಲ. ಹೊಟೆಲಿನ  ಎಸಿ ರೂಮಿನಲ್ಲಿ ಕುಳಿತು ದೋಸೆ ತಿನ್ನುವಾಗಲೆಲ್ಲ ಬಸ್ ಸ್ಟ್ಯಾಂಡಿನ ಕ್ಯಾಂಟೀನಿನಲ್ಲಿ ಮಸಾಲೆದೋಸೆ ತಿನ್ನುವ ಆಸೆಯೊಂದು ಆಸೆಯಾಗಿಯೇ ಉಳಿದುಹೋದದ್ದು ನೆನಪಾಗಿ, ತಿನ್ನುತ್ತಿರುವ ದೋಸೆಯ ರುಚಿ ಹೆಚ್ಚಿದಂತೆ ಅನ್ನಿಸುವುದೂ ಸುಳ್ಳಲ್ಲ. ಪ್ರತಿದಿನ ಬೆಳಗ್ಗೆ ರಸ್ತೆಯಲ್ಲಿ ತರಕಾರಿ ಮಾರುವವನ ಧ್ವನಿವರ್ಧಕದಲ್ಲಿ ತರಕಾರಿಯ ಹೆಸರುಗಳನ್ನು ಕೇಳುವಾಗಲೆಲ್ಲ, ಕಂಟ್ರೋಲ್ ರೂಮಿನ ಮೈಕಿನಿಂದ ಹೊರಬರುತ್ತಿದ್ದ ಊರಿನ ಹೆಸರುಗಳೆಲ್ಲ ಒಂದೊಂದಾಗಿ ನೆನಪಾಗುತ್ತವೆ. ಆ ಹೆಸರುಗಳನ್ನು ಹೊತ್ತ ಬೋರ್ಡುಗಳೆಲ್ಲ ಡಿಪೋದಿಂದ ಸ್ಟ್ಯಾಂಡಿಗೆ ಬರುವ ಫಸ್ಟ್ ಬಸ್ಸುಗಳಿಗಾಗಿ ಕಾಯುತ್ತಿರಬಹುದು ಎನ್ನುವ ಯೋಚನೆಯೊಂದು ಹಾದುಹೋಗಿ, ಮಾಯಾಲೋಕದಂತಹ ಬಸ್ ಸ್ಟ್ಯಾಂಡಿನ ಸಹಜಸುಂದರ ನೆನಪನ್ನು ನನ್ನದಾಗಿಸಿಕೊಳ್ಳುತ್ತೇನೆ. ************************************************* ಇದು ಈಅಂಕಣದ ಕೊನೆಯ ಕಂತು – ಅಂಜನಾ ಹೆಗಡೆ ಮೂಲತ: ಉತ್ತರ ಕನ್ನಡದವರಾದ ಅಂಜನಾ ಹೆಗಡೆಯವರು ಸದ್ಯ ಬೆಂಗಳೂರಲ್ಲಿ ನೆಲೆಸಿರುತ್ತಾರೆ. ‘ಕಾಡ ಕತ್ತಲೆಯ ಮೌನ ಮಾತುಗಳು’ ಇವರು ಪ್ರಕಟಿಸಿದ ಕವನಸಂಕಲನ.ಓದು ಬರಹದ ಜೊತೆಗೆ ಗಾರ್ಡನಿಂಗ್ ಇವರ ನೆಚ್ಚಿನ ಹವ್ಯಾಸ

Read Post »

ಅಂಕಣ ಸಂಗಾತಿ, ಮೂರನೇ ಆಯಾಮ

ಅಂಕಣ ಬರಹ ಹಲವು ಬಣ್ಣಗಳನ್ನು ಹೊತ್ತ ಭಾವನೆಗಳ ಕೋಲಾಜ್ ಆಕಾಶಕ್ಕೆ ಹಲವು ಬಣ್ಣಗಳು (ಗಜಲ್ ಸಂಕಲನ)ಕವಿ- ಸಿದ್ಧರಾಮ ಹೊನ್ಕಲ್ಬೆಲೆ-೧೩೦/-ಪ್ರಕಾಶನ- ಸಿದ್ಧಾರ್ಥ ಎಂಟರ್‍ಪ್ರೈಸಸ್              ಇಲ್ಲಿ ಕತ್ತಲೆ ಕಳೆದು ಬೆಳಕು ಮೂಡಿಸಿದವರೆ ಸಂತ ಸೂಫಿಗಳು ಬಸವಾದಿ ಶರಣರು ಸಾಕಿ ಎನ್ನುತ್ತ ತಮ್ಮ ನೆಲದ ಗಟ್ಟಿ ದನಿಗಳನ್ನು ಉಲ್ಲೇಖಿಸಿ ಗಜಲ್‌ಲೋಕಕ್ಕೆ ಬಂದಿರುವ ಕವಿ ಸಿದ್ಧರಾಮ ಹೊನ್ಕಲ್ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಾ ಹಳಬರು. ಕಥೆ, ಕವನ, ಪ್ರವಾಸ ಕಥನ, ಪ್ರಬಂಧಗಳು ಹೀಗೆ ಹತ್ತಾರು ಪ್ರಕಾರಗಳಲ್ಲಿ ಕೈಯಾಡಿಸಿರುವ ಸಿದ್ಧರಾಮ ಹೊನ್ಕಲ್ ತಮ್ಮದೇ ನೆಲದ ಗಜಲ್‌ನ್ನು ಆತುಕೊಳ್ಳಲು ಇಷ್ಟು ತಡಮಾಡಿದ್ದೇಕೆ ಎಂದು ನಾನು ಬಹಳ ಸಲ ಯೋಚಿಸಿದ್ದೇನೆ. ಉತ್ತರ ಕರ್ನಾಟಕದ ಮಣ್ಣಿನಲ್ಲೇ ಹಾಸಿಕೊಂಡಿರುವ ಗಜಲ್‌ಗೆ  ಒಲಿಯದವರೇ ಇಲ್ಲ. ಗಜಲ್‌ನ ಶಕ್ತಿಯೇ ಅಂತಹುದ್ದು. ಗಜಲ್‌ನ ಜೀವನ ಪ್ರೀತಿಯೇ ಹಾಗೆ. ಎಲ್ಲವನ್ನೂ ಎಲ್ಲರನ್ನೂ ಒಳಗೊಳ್ಳುವ ಸಮಷ್ಠಿ ಅದು. ಜಿಂಕೆಯ ಆರ್ತನಾದದ, ಮನದ ಮಾತುಗಳನ್ನು ನವಿರಾಗಿ ಹೇಳುವ, ಗೇಯತೆಯೊಂದಿಗೆ ಸಕಲರನ್ನು ಸೆಳೆದಿಟ್ಟುಕೊಳ್ಳುವ ಗಜಲ್ ಎನ್ನುವ ಮೋಹಪಾಶ ಹಾಗೆ ಯಾರನ್ನೂ ಬಿಡುವುದಿಲ್ಲ. ಇಲ್ಲಿ ಸಿದ್ಧರಾಮ ಹೊನ್ಕಲ್ ಆಕಾಶದ ಹಲವು ಬಣ್ಣಗಳನ್ನು ತಮ್ಮ ಪುಸ್ತಕದಲ್ಲಿ ಹಿಡಿದಿಟ್ಟುಕೊಂಡು ನಮ್ಮೆದುರಿಗೆ ನಿಂತಿದ್ದಾರೆ. ಒಂದು ಹಂತಕೆ ಬರುವವರೆಗೆ ಯಾರೂ ಗುರ್ತಿಸುವುದಿಲ್ಲಹಾಗಾಗಿ ಯಾರ ಮೆಚ್ಚುಗೆಗಾಗಿ ಕಾಯಬೇಡಎಂದು ತಮಗೆ ತಾವೇ ಹೇಳಿಕೊಂಡಂತೆ ಗಜಲ್ ಲೋಕದಲ್ಲಿ ಗುರುತಿಸಿಕೊಳ್ಳುವುದು ಅಷ್ಟೇನು ಸುಲಭದ್ದಾಗಿರಲಿಲ್ಲ ಎನ್ನುವ ವೈಯಕ್ತಿಕ ಮಾತಿನ ಜೊತೆಗೇ ಸಾಮಾಜಿಕ ಸತ್ಯವೊಂದನ್ನು ನಾಜೂಕಾಗಿ ಹೇಳಿಬಿಡುತ್ತಾರೆ. ಯಾವುದೇ ಒಂದು ಕ್ಷೇತ್ರವಿರಲಿ ಆರಂಭದಲ್ಲಿ ಯಾರು ಗುರುತಿಸುತ್ತಾರೆ ಹೇಳಿ? ಅದು ಸಾಹಿತ್ಯ ಕ್ಷೇತ್ರವಿರಬಹುದು, ಕ್ರೀಡೆಯಾಗಿರಬಹುದು ಅಥವಾ ಇನ್ಯಾವುದೇ ವಲಯದಲ್ಲಾಗಿರಬಹುದು. ಒಂದು ವ್ಯಕ್ತಿಯನ್ನು ಗುರುತಿಸಲು ಹಲವಾರು ವರ್ಷಗಳ ಕಾಲ ಕಾಯಬೇಕು. ಒಂದು ಹಂತಕ್ಕೆ ಬಂದಮೇಲೆ ತಾನೇ ತಾನಾಗಿ ಎಲ್ಲರಿಂದ ಗುರುತಿಸಲ್ಪಟ್ಟರೂ ಆರಂಭದಲ್ಲಿ ಮೂಲೆಗುಂಪಾಗುವುದು ಸಹಜ. ಹೀಗಾಗಿ ಯಾರ ಮೆಚ್ಚುಗೆಗಾಗಿ ಕಾಯುವ ಅಗತ್ಯವಿಲ್ಲ. ನಮ್ಮ ಆತ್ಮಬಲವೇ ನಮ್ಮನ್ನು ಕಾಪಾಡಬೇಕು ಎಂಬ ಮಾತು ಎಲ್ಲರಿಗೂ ಅನ್ವಯಿಸುವ ಮಾತು.                   ಗಜಲ್ ಹಾಗೆ ಎಲ್ಲ ಭಾವಗಳನ್ನು ತನ್ನೊಳಗೆ ಬಿಟ್ಟುಕೊಳ್ಳುವುದಿಲ್ಲ. ಅದಕ್ಕೆ ಅದರದ್ದೇ ಆದ ಹತ್ತಾರು ನಿಯಮಗಳಿವೆ. ತನ್ನದೇ ಆದ ಸಿದ್ಧ ಮಾದರಿಯ ಭಾವಗಳಿವೆ. ಪ್ರೀತಿ ಪ್ರೇಮ ಕ್ಕೆ ಒಗ್ಗಿಕೊಳ್ಳುವ ಗಜಲ್ ಅದಕ್ಕಿಂತ ವಿರಹಕ್ಕೆ ಹೆಚ್ಚು ಹತ್ತಿರವಾಗುತ್ತದೆ. ಹಾಗೆಂದು ತರ್ಕಕ್ಕೆ, ಆಧ್ಯಾತ್ಮಿಕಕ್ಕೆ ಗಜಲ್ ಒಗ್ಗುವುದಿಲ್ಲ ಎಂದಲ್ಲ. ಗಜಲ್‌ನ ಮೂಲವೇ ಅಲ್ಲಿದೆ. ಪ್ರೇಮದೊಳಗಿನ ತಾರ್ಕಿಕತೆಗೆ ಹಾಗೂ ಪ್ರೇಮದೊಳಗಿನ ಆಧ್ಯಾತ್ಮಿಕತೆಗೆ ಗಜಲ್‌ನ ಪೂರ್ವಸೂರಿಗಳು ಹೆಚ್ಚು ಒತ್ತು ನೀಡಿದ್ದನ್ನು ಗಮನಿಸಬೇಕು. ಪ್ರೇಮದ ಕೊನೆಯ ಗುರಿಯೇ ಆಧ್ಯಾತ್ಮ ಎಂಬುದನ್ನು ಮರೆಯುವಂತಿಲ್ಲ. ಹಾಗೆಂದು ಗಜಲ್ ಸಾಮಾಜಿಕ ಕಳಕಳಿಯನ್ನು ಬೇಡ ಎನ್ನುವುದೇ? ಖಂಡಿತಾ ಇಲ್ಲ. ಹಿತವಾದ ಮಾತಿನ ಎಲ್ಲವನ್ನೂ ಗಜಲ್ ಅಪ್ಪಿಕೊಳ್ಳುತ್ತದೆ. ಅದು ಸಾಮಾಜಿಕ ಅಸಮಾನತೆ ಇರಲಿ, ಪರಿಸರ ರಕ್ಷಣೆ ಇರಲಿ ಎಲ್ಲವೂ ಗಜಲ್‌ಗೆ ಸಮ್ಮತವೇ.ಸಸಿಯೊಂದು ಹಚ್ಚಿದರೆ ತಾನೆ ಬೆಳೆದು ಹೆಮ್ಮರವಾಗಿ ಹೂ ಹಣ್ಣು ಕೊಡುವುದುಹಚ್ಚುವ ಮುಂಚೆ ಭೂಮಿಯ ಹಸನಾಗಿಸುವುದು ನೀ ಕಲಿ ಗೆಳೆಯಾಎನ್ನುತ್ತಾರೆ ಕವಿ. ಸಸಿಯನ್ನು ನೆಟ್ಟರೆ ಮಾತ್ರ ಭೂಮಿ ಹಸನಾಗುವ ಮಾತು ಎಷ್ಟು ಮಾರ್ಮಿಕವಾಗಿ ಇಲ್ಲಿ ಮೂಡಿದೆ. ಸಸಿಯನ್ನೇ ನೆಡದೇ ಹಣ್ಣು ಬೇಕು ಹೂವು ಬೇಕು ಎಂದರೆ ಎಲ್ಲಿಂದ ತರಲಾದೀತು? ಕೃಷಿಯನ್ನು ಕೀಳಾಗಿ ಕಾಣುವ ಎಲ್ಲರ ಕುರಿತಾಗಿ ಈ ಮಾತು ಅನ್ವಯಿಸುತ್ತದೆ.  ಕವಿಗೆ ಸಮಾಜದ ರೀತಿ ನೀತಿಗಳು ಗೊತ್ತಿದೆ. ಇಲ್ಲಿ ಎಲ್ಲವೂ ನಾವು ಅಂದುಕೊಂಡಂತೆ ಆಗುವುದಿಲ್ಲ. ಯಾರೋ ಬಂದು ನಮ್ಮ ಒಳ್ಳೆಯ ಕೆಲಸಕ್ಕೆ ಬೆನ್ನು ತಟ್ಟುತ್ತಾರೆ ಎಂಬ ಭ್ರಮೆಯಲ್ಲಿ ಇರಬೇಕಿಲ್ಲ. ಯಾರೂ ನಮ್ಮನ್ನು ಪ್ರೋತ್ಸಾಹಿಸುವುದಿಲ್ಲ. ಯಾರಾದರೂ ಸ್ವಲ್ಪ ಬೆಳವಣಿಗೆ ಕಂಡರೆ ಅವರ ಕಾಲು ಹಿಡಿದು ಎಳೆಯುವ ಮನೋಭಾವವೇ ಈ ಸಮಾಜದಲ್ಲಿ ತುಂಬಿಕೊಂಡಿದೆ. ಹೀಗಾಗಿಯೇ ಕವಿ,ಸಹಜ ಬೆನ್ನು ತಟ್ಟಿ ನಗು ಅರಳಿಸುವವರು ಜಗದಲ್ಲಿಲ್ಲಎಲ್ಲರೂ ಮಾನವೀಯರಿದ್ದಾರೆಂಬ ಭ್ರಮೆ ನಿನಗೆ ಬೇಡ ಗೆಳೆಯಎನ್ನುತ್ತಾರೆ. ನಮ್ಮ ಬೆನ್ನು ತಟ್ಟಿ ನಗು ಅರಳಿಸುವವರು ಸಿಗುವುದಿಲ್ಲ. ಕೇವಲ ನೋವು ನೀಡಿ ಸಂಭ್ರಮಿಸುವವರು ಮಾತ್ರ ನಮ್ಮ ಸುತ್ತಮುತ್ತ ತುಂಬಿಕೊಂಡಿದ್ದಾರೆ. ನಮ್ಮ ಸಮಾಜ ಜಾತಿ, ಧರ್ಮ ಮುಂತಾದ ಬೇಡದ ವ್ಯಾಧಿಯನ್ನು ತಲೆಯಲ್ಲಿ ತುಂಬಿಕೊಂಡು ನರಳುತ್ತಿದೆ.ಈ ಭೂಮಿಯಲ್ಲಿ ಗೀತೆ ಕುರಾನ್ ಬೈಬಲ್ ಗುರುವಾಣಿ ಹೀಗೆ ಏನೆಲ್ಲ ಒಳ್ಳೆಯದು ಬಿತ್ತಿಹರುಈ ಸಮಾನತೆಯ ಸಾಮರಸ್ಯ ಹೊಸ ಹೂವು ಏಕೆ ಮತ್ತೆ ಮತ್ತೆ ಅರಳುತ್ತಿಲ್ಲ ಸಾಕಿ ಪ್ರತಿ ಧರ್ಮದಲ್ಲೂ ಮನುಷ್ಯತ್ವವನ್ನೇ ಬೋಧಿಸಿದ್ದಾರೆ. ಮಾನವನ ಏಳ್ಗೆ ಇರುವುದೇ ಪ್ರೀತಿ ಮ,ತ್ತು ಸಹಬಾಳ್ವೆಯಲ್ಲಿ ಎಂದಿದ್ದರೂ ನಾವು ಮಾತ್ರ ಜಾತಿ ಧರ್ಮದ ಹೆಸರು ಹೇಳಿಕೊಂಡು ಕಚ್ಚಾಡುತ್ತಿದ್ದೇವೆ. ಗೀತೆ ಇರಲಿ, ಕುರಾನ್ ಇರಲಿ, ಬೈಬಲ್ ಇರಲಿ ಅಥವಾ ಗುರುವಾಣಿಯೇ ಇರಲಿ. ಎಲ್ಲರೂ ಪ್ರೀತಿಯೇ ಜಗದಲ್ಲಿ ಸರ್ವೋತ್ತಮ ಎಂದರೂ ಅದನ್ನು ಯಾರೂ ಆಚರಣೆಗೆ ತರುತ್ತಿಲ್ಲ. ನಾವು ಗೀತೆಯನ್ನು ನಂಬುತ್ತೇವೆ. ಅಂತೆಯೇ ಕುರಾನ್ ಹಾಗು ಬೈಬಲ್‌ನ್ನೂ ಕೂಡ. ಗೀತೆ, ಕುರಾನ್ ಬೈಬಲ್‌ನಲ್ಲಿರುವುದೇ ಪರಮಸತ್ಯ ಎಂದು  ಭಾವಿಸುತ್ತ ಅದನ್ನು ಆಚರಣೆಗೆ ತರುತ್ತಿರುವುದಾಗಿ ಭ್ರಮೆಗೊಳಗಾಗಿದ್ದೇವೆ. ಆದರೆ ವಾಸ್ತವದಲ್ಲಿ ನಾವ್ಯಾರೂ ನಮ್ಮ ಧರ್ಮಗ್ರಂಥಗಳನ್ನು ತಿಳಿದೇ ಇಲ್ಲ.  ಅದು ಬೋಧಿಸಿದ ಪ್ರೇಮವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡೇ ಇಲ್ಲ ಎಂಬ ವಿಷಾದ ಕವಿಗಿದೆ. ಸತ್ಯವಾಡಿದ ಹರಿಶ್ಚಂದ್ರ ಚಂದ್ರಮತಿಯನ್ನ ಮಾರಿಕೊಂಡದ್ದು, ಧರ್ಮರಾಯ ಧರ್ಮವನ್ನು ಉಳಿಸಲು ಹೋಗಿ ದ್ರೌಪದಿಯನ್ನೇ ಪಣಕ್ಕಿಟ್ಟು ಕಳೆದುಕೊಂಡಿದ್ದನ್ನು ಹೇಳುತ್ತ ಸಮಾಜದಲ್ಲಿ ಯಾರಂತೆ ಇರಬೇಕು ಎಂದು ಕೇಳುತ್ತಾರೆ. ಧರ್ಮ ಎಂದರೆ ಎಲ್ಲವನ್ನೂ ಒಳಗೊಂಡದ್ದು ಎನ್ನುವ ವಿಶ್ವ ಕುಟುಂಬದ ಮಾತು ಇಲ್ಲಿ ಕೇಳಿಸುತ್ತದೆ. ಹೀಗಾಗಿಯೇ ಜಾತಿ ಧರ್ಮದ ಹೆಸರಿನಲ್ಲಿ ‘ಮಾತು ಮಾತಲ್ಲಿ ಕೊಳ್ಳಿ ಇಟ್ಟು ಮನಸ್ಸು ಮುರಿಯುವುದು ಬೇಕಿರಲಿಲ್ಲ ಈಗ’ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.ಕೆಲವರಿಗೆ ಜಾತಿಯದು ಹಲವರಿಗೆ ಧರ್ಮದ್ದು ಹೀಗೆ ಹೆಣ್ಣು ಮಣ್ಣಿನ ಹುಚ್ಚುಹೀಗೆ ಬಹುತೇಕರಿಗೆ ಹಣ ಅಧಿಕಾರ ಅಂತಸ್ತಿನ ಹುಚ್ಚು ತಲೆ ಕೆಡಿಸಿಕೊಬೇಡ ಸಖಿಎನ್ನುವ ಮಾತುಗಳಲ್ಲಿ ಸಮಾಜದ ಸತ್ಯ ಅಡಗಿದೆ. ಕೆಲವರು ಧರ್ಮ ಜಾತಿಯ ಉನ್ಮಾದದಲ್ಲಿ ತೇಲುತ್ತಿದ್ದರೆ ಕೆಲವರು ಹಣ, ಅಧಿಕರ ಹಾಗೂ ಅಂತಸ್ತಿನ ಗುಲಾಮರಾಗಿದ್ದಾರೆ. ಇನ್ನು ಕೆಲವರಿಗೆ ಹೆಣ್ಣಿನ ಹುಚ್ಚು. ಭಾರತ ಹೆಣ್ಣಿನ ಯೋನಿಯಿಂದ ಹರಿಯುವ ರಕ್ತದಲ್ಲಿ ಶುಭ್ರಸ್ನಾನ ಮಾಡುತ್ತಿದೆ. ಅತ್ಯಾಚಾರಗಳು ಹೆಚ್ಚಾಗಿರುವ ಈ ಕಾಲದಲ್ಲಿ ಇಂತಹ ಸಾಲುಗಳು ನಮ್ಮನ್ನು ಪದೇಪದೇ ಎಚ್ಚರಿಸುತ್ತವೆ. ‘ತನ್ನ ಹೆತ್ತವಳು ಒಡಹುಟ್ಟಿದವಳು ಒಂದು ಹೆಣ್ಣಂದರಿಯದ ಅವಿವೇಕಿ ಮೃಗಗಳಿವು’ ಎಂದು ವಿಷಾದಿಸುತ್ತಲೇ ಹೆಣ್ಣು ಪ್ರತಿ ಜೀವಕ್ಕೂ ನೀಡುವ ಸುಖವನ್ನು ನವಿರಾಗಿ ಹೇಳುತ್ತಾರೆ. ಕತ್ತಲೆಯಲಿ ಕಳೆದವನ ಬದುಕಿಗೆ ಬೆಳಕಾಗಿ ಬಂದವಳು ನೀ ಸಖಿಕಮರಿದ ಈ ಬದುಕಿಗೆ ಜೀವರಸ ತುಂಬಿದವಳು ನೀ ಸಖಿಹೆಣ್ಣು ಬದುಕಿನ ಕತ್ತಲೆಯನ್ನು ಹೋಗಲಾಡಿಸಿದವಳು. ಬದುಕಿಗೆ ಬೆಳಕಾಗಿ, ಬೆಳದಿಂಗಳಾಗಿ ಬಂದವಳು. ಬೇಸರದ ಬದುಕಿಗೆ ಆ ಪ್ರಿಯತಮೆ ಜೀವರಸವನ್ನು ತುಂಬುತ್ತಾಳೆ. ಜೀವಕ್ಕೆ ಜೀವವಾದ ಪ್ರಿಯತಮೆ ನಮ್ಮ ಬಾಳಿಗೆ ಬೆಳಕನ್ನು ತರುವ ಕಂದಿಲು ಎನ್ನುವುದು ತಪ್ತಗೊಂಡ ಎದೆಯೊಳಗೆ ಒಂದಿಷ್ಟು ತಂಪು ಸೂಸುತ್ತಾರೆ.ಕನಸಿನಲ್ಲಿ ಕಾಡುವಳು ಖುಷಿಯಲ್ಲೂ ಕುದಿಯುವಳುಬಿಸಿಲನ್ನೇ ಉಂಡು ಎಲ್ಲೆ ನೆರಳಾದಳು ಸಾಕಿ ಎನ್ನುವ ಮಾತಿನಲ್ಲಿಯೂ ಆ ಗೆಳತಿ ಉರಿಬಿಸಿಲಿನಲ್ಲೂ ತಮ್ಮನ್ನು ಸಲಹುವ ಕುರಿತು ಮನಸ್ಸು ಬಿಚ್ಚಿ ಹೇಳುತ್ತಲೇ ಕನಸಿನಲ್ಲಿ ಕಾಡುವ ಈ ಸುಂದರಿ ವಿರಹವನ್ನೂ ಕೊಡಬಲ್ಲಳು ಎನ್ನುತ್ತಾರೆ. ಹಾಗೆ ನೋಡಿದರೆ ವಿರಹವಿಲ್ಲದ ಪ್ರೇಮಕ್ಕೆ ಸವಿ ಎಲ್ಲಿದೆ? ವಿರಹವೇ ಪ್ರೇಮದ ಮಧುರತೆಯನ್ನು ಹೆಚ್ಚಿಸುತ್ತದೆ ಎಂಬುದನ್ನು ಈ ಜಗತ್ತಿನ ಎಲ್ಲ ಪ್ರೇಮಿಗಳೂ ಒಪ್ಪಿಕೊಂಡಿದ್ದಾರೆ. ಹಾಗಿದ್ದ ಮೇಲೆ ಈಗಾಗಲೇ ಹೇಳಿದಂತೆ ವಿರಹಕ್ಕೆಂದೇ ರಚಿತವಾಗಿರುವ ಗಜಲ್‌ನಲ್ಲಿ ವಿರಹವಿರದಿದ್ದರೆ ಏನು ಚೆನ್ನ ಹೇಳಿ?ಹತ್ತಿರವಿದ್ದೂ ಅಪರಿಚಿತರಂತೆ ದೂರವಾದವರ ಬಗ್ಗೆ ಕೇಳಿದ್ದೆದೂರವಿದ್ದೂ ಹತ್ತಿರವಾಗಿ ನಿನ್ನ ಸೇರುವಷ್ಟರಲಿ ನೀ ಕನಸಾದೆಈ ಹುಡುಗಿಯರೇನೂ ಕಡಿಮೆಯವರಲ್ಲ. ಹುಡುಗರನ್ನು ಕಾಡುವುದೇ ತಮ್ಮ ಜೀವನದ ಮಹದೋದ್ದೇಶ ಎಂದುಕೊಂಡವರು. ಹೀಗಾಗಿ ಇನ್ನೇನು ತನ್ನವಳಾದಳು ಎಂದುಕೊಳ್ಳುವಾಗಲೇ ದೂರ ಸರಿದು ತಮಾಷೆ ನೋಡುತ್ತಾರೆ. ಅಪರಿಚಿತಳು ಎಂದು ಸುಮ್ಮನಾದರೆ ತಾವಾಗಿಯೇ ಹತ್ತಿರ ಬಂದು ಆತ್ಮೀಯರಾಗುತ್ತಾರೆ. ದೂರವನ್ನು ಕ್ಷಣ ಮಾತ್ರದಲ್ಲೇ ಕರಗಿಸಿದರೂ ಕೈಗೆಟುಕದಂತೆ ಕನಸಾಗಿಬಿಡುವ ಕಲೆ ಹುಡುಗಿಯರಿಗಷ್ಟೇ ಗೊತ್ತಿದೆ. ಕವಿಗೆ ಹೀಗೆ ಪುಳಕ್ಕನೆ ಮಿಂಚಂತೆ ಮಿಂಚಿ ಮಾಯವಾಗುವ ಈ ಹುಡುಗಿಯರ ಕುರಿತು ವಿಚಿತ್ರ ತಲ್ಲಣವಿದೆ.ಈ ಪ್ರೀತಿ ಪ್ರೇಮ ವಿರಹ ಕಾಮದ ಬಗ್ಗೆ ಅನೇಕ ಕಥೆಗಳು ಗೊತ್ತುಹೊನ್ನಸಿರಿಯ ಈ ಅಲೌಕಿಕ ಪ್ರೀತಿ ಅರಿವಾಗುವಷ್ಟರಲಿ ನೀ ನಕ್ಷತ್ರವಾದೆಸದಾ ಜೊತೆಗಿರುತ್ತೇನೆ ಎಂದು ಆಣೆ ಕೊಟ್ಟು ಭಾಷೆಯಿತ್ತವರು ಹೀಗೆ ಒಮ್ಮೆಲೆ ದೂರ ಸರಿದು ನಕ್ಷತ್ರಗಳಾಗಿಬಿಡುವುದನ್ನು ಸಲೀಸಾಗಿ ಒಪ್ಪಿಕೊಳ್ಳಲಾಗುವುದಿಲ್ಲ. ಆದರೂ ಕವಿ ‘ಕಂದಿಲು ಬೇಡ ಕಣ್ಣ ಕಾಂತಿಯಲ್ಲಿ ಬಾ’ ಎನ್ನುತ್ತಾರೆ. ಇದು ಪ್ರೇಮದ ಪರಾಕಾಷ್ಟೆ. ತನ್ನ ಪ್ರೇಯಸಿಯ ಕಣ್ಣಿನ ಕಾಂತಿ ಎಲ್ಲ ಕಂದಿಲುಗಳ ಬೆಳಕನ್ನೂ ಮೀರಿಸುವಂತಹುದ್ದು ಎನ್ನುವುದು ಸಹಜ.ಕಾಯುವಲ್ಲಿ ಇರುವ ಕಾತರ ಸನಿಹದಲ್ಲಿ ಇರುವುದಿಲ್ಲಸಾಂಗತ್ಯಕ್ಕಾಗಿ ಸದಾ ಬಯಸಿ ಕಾಯುತ್ತಾನೆಹೀಗೆ ಕಾಯುವಿಕೆಯನ್ನು ನಿರಂತರವಾಗಿಸುತ್ತ, ಕಾಯುವುದೇ ತಪಸ್ಸು ಎಂದು ತಿಳಿದುಕೊಳ್ಳುವ ಕವಿಗೆ ಪ್ರೇಮ ಕೂಡ ಜೀವನದಲ್ಲಿ ಬೇಕಾಗಿರುವ ಭಾವಗಳಲ್ಲಿ ಒಂದು ಎಂಬ ಅರಿವಿದೆ. ಹೀಗಾಗಿಪ್ರೇಮಿಸಲಾಗದು ವಂಚಿಸಲಾಗದು ನಿನಗೆ ಮರೆತುಬಿಡುಹಂಬಲಿಸಿರಬಹುದು ಅಂಗಲಾಚಲಾಗದು ನಿನಗೆ ಮರೆತುಬಿಡು.ಎಂದು ಕೈಗೆ ಸಿಗದ್ದನ್ನು ಮರೆತು ಮುಂದೆ ಸಾಗಬೇಕಾದ ಜೀವನದ ಕುರಿತು ಎಚ್ಚರವಹಿಸುತ್ತಾರೆ. ಕೈಕೊಟ್ಟ ಪ್ರೇಮಿಯ ಬಗ್ಗೆ ಬೇಸರವಾಗುತ್ತದೆ ಎಂಬುದೇನೋ ನಿಜ. ಹಾಗೆಂದು ಅದೆಷ್ಟು ಸಮಯ ಕೊರಗಲಾದೀತು ಹೇಳಿ? ಹೀಗಾಗಿ ಆದದ್ದನ್ನೆಲ್ಲ ಮರೆತು ಮುಂದೆ ಸಾಗಬೇಕಾದ ಅನಿವಾರ್‍ಯತೆಯನ್ನು ಹೇಳುತ್ತಲೇ ಒಪ್ಪತ್ತಿನ ಗಂಜಿಗೂ, ತುಂಡು ರೊಟ್ಟಿಗೂ ಹೋರಾಟವಿದುಹಸಿವೆಯೇ ಖೋಡಿ ಏನೆಲ್ಲ ಮಾಡಿ ಹೆಣಗುತಿಹಳು ತಾಯಿಎಂದು ನಮ್ಮ ನಡುವೆ ತುತ್ತು ಕೂಳಿಗೂ ಕಷ್ಟ ಅನುಭವಿಸುತ್ತಿರುವವರ ವೇದನೆಯನ್ನು ಕಟ್ಟಿಕೊಡುತ್ತಾರೆ. ಮನೆ ನಡೆಸಲು ತಾಯಿ ಎಂಬ ಹೆಣ್ಣು ಅನುಭವಿಸುವ ಕಷ್ಟವನ್ನು ಗಂಡು ಅನುಭವಿಸಲಾರ. ಎಷ್ಟೋ ಮನೆಗಳಲ್ಲಿ ಹೆತ್ತಿಕೊಂಡ ತಪ್ಪಿಗಾಗಿ ಮಕ್ಕಳನ್ನು ಸಾಕುವ ಕರ್ಮ ತಾಯಿಯದ್ದೇ ಆಗಿರುತ್ತದೆ. ತನ್ನ ಕಾಮಕ್ಕಾಗಿ ಅವಳನ್ನು ಬಳಸಿಕೊಂಡು ತಾಯಿಯನ್ನಾಗಿ ಮಾಡಿದ ಮನೆಯ ಯಜಮಾನ ಎನ್ನಿಸಿಕೊಂಡ ಗಂಡಸು ಆ ಎಲ್ಲ ಜವಾಬ್ಧಾರಿಯನ್ನು ತಾಯಿಯ ತಲೆಗೆ ಕಟ್ಟಿ ನಿರುಮ್ಮಳವಾಗಿ ಬಿಡುವುದು ಈ ಸಮಾಜದ ಚೋದ್ಯಗಳಲ್ಲಿ ಒಂದು      ಈ ಎಲ್ಲದರ ನಡುವೆ ನಮ್ಮ ಗೋಮುಖ ವ್ಯಾಘ್ರತನವೊಂದು ಇದೆಯಲ್ಲ ಅದು ಈ ಸಮಾಜಕ್ಕೆ ಕಂಟಕ. ಬದುಕಿನಲ್ಲಿ ಯಾವ್ಯಾವುದೋ ಕಾರಣಕ್ಕಾಗಿ ಮುಖವಾಡ ಹಾಕುವವರ ಸಂಖ್ಯೆ ಬಹುದೊಡ್ಡದಿದೆ. ಆದರೆ ಸತ್ತ ಮೇಲೂ ‘ಸೇರಿದರೆ ಸೇರಲಿ ತಮ್ಮ ದೇಹದ ಬೂದಿಯು ಗಂಗೆಯಲಿ ಅನ್ನುವವರ ಬಹುದೊಡ್ಡ ಸಾಲುಂಟು’ ಎಂದು ಕವಿ ಬೇಸರಿಸುತ್ತಾರೆ. ಗಂಗೆಯನ್ನು ಸ್ವಚ್ಛಗೊಳಿಸಬೇಕಿದೆ ಎನ್ನುತ್ತಲೇ ತಮ್ಮ ದೇಹದ ಬೂದಿಯೂ ಗಂಗೆಯಲ್ಲಿ ಸೇರಿ ಜೀವಿತಾವಧಿಯಲ್ಲಿ ಮಾಡಿದ ಪಾಪಗಳೆಲ್ಲ ಕಳೆದುಹೋಗಲಿ ಎನ್ನುತ್ತ ಸ್ವರ್ಗ ಬಯಸುವವರ ಕುರಿತಾಗಿ ಹೇವರಿಕೆಯಿದೆ.ಸುತ್ತ ಪರಸ್ಪರರು ಬೆನ್ನು ನೀವಿಕೊಳ್ಳುವುದು ಇವನಿಗೇಕೆ ಅರ್ಥವಾಗುವುದಿಲ್ಲನೀ ನನಗಿದ್ದರೆ ನಾ ನಿನಗೆ ಎಂಬ ಸೋಗಲಾಡಿಗಳ ಮಧ್ಯೆ ಭ್ರಮ ನಿರಸನವಾಗುತ್ತಿದೆ ಸಾಕಿಎಂಬ ಸಾಲು ಇಂದಿನ ಸಮಾಜಕ್ಕೆ ಹಿಡಿದ ಕನ್ನಡಿಯಾಗಿ ಕಾಣುತ್ತದೆ. ಎಲ್ಲೆಡೆಯೂ ಗುಂಪುಗಳದ್ದೇ ಸಾಮ್ರಾಜ್ಯ. ನೀವು ನಮ್ಮ ಪರವಾಗಿದ್ದರೆ ಮಾತ್ರ ನಾವು ನಿಮ್ಮ ಪರವಾಗಿರುತ್ತೇವೆ ಎನ್ನುವ ದೊಡ್ಡವರು ಎನ್ನಿಸಿಕೊಂಡಿರುವವರ ಮಾತು ತೀರಾ ಅಸಹ್ಯ ಹುಟ್ಟಿಸುವಂತಹುದ್ದು. ತಮ್ಮ ಗುಂಪಿಗೆ ಸೇರಿದವರಿಗೆ ಎಲ್ಲ ಅನುಕೂಲಗಳನ್ನು ಮಾಡಿಕೊಡುತ್ತ, ಪ್ರಶಸ್ತಿಗಳ ಸರಮಾಲೆಯನ್ನೇ ಕಟ್ಟಿ ಕೊರಳಿಗೆ ಹಾಕುವ ಬಲಾಢ್ಯರಿಗೆ ಅವರ ಹಿಂಬಾಲಕರ ಸಂಖ್ಯೆ ಹೆಚ್ಚಾಗಬೇಕಿದೆ. ಇದಕ್ಕೆ ಇಂದಿನ ಸಾಹಿತ್ಯ ಲೋಕ ಕೂಡ ಹೊರತಾಗಿಲ್ಲ. ಕವಿ ತಮ್ಮ ಸಾಲುಗಳಲ್ಲಿಯೇ ಇಂತಹ ಸೋಕಾಲ್ಡ್ ಪ್ರಮುಖರನ್ನು ವ್ಯಂಗ್ಯವಾಡುತ್ತಾರೆ. ಸಿದ್ಧರಾಮ ಹೊನ್ಕಲ್

Read Post »

ಕಾವ್ಯಯಾನ

ತಲೆದಿಂಬಿನೊಳಗೆ ಅವಿತ ನಾ

ಕವಿತೆ ತಲೆದಿಂಬಿನೊಳಗೆ ಅವಿತ ನಾ ಡಾ. ರೇಣುಕಾ ಅರುಣ ಕಠಾರಿ ಈಗೀಗ ಸಾಕ್ಷಿಯ ಪ್ರಜ್ಞೆ ಮರೆತ ನಾಸದ್ದಿಲ್ಲದೆ ತಲೆದಿಂಬಿನೊಳಗಿನಿಂದಎದ್ದು ಎದ್ದು ಬರುವ ಕನಸಗಳಿಗೆ ಉತ್ತರ ಕೊಡಬೇಕಿದೆಪ್ರತಿ ಪ್ರಶ್ನೆಗೂ ಅದೇ ಉತ್ತರವೆಂದು ಹೇಳಿದಾಗಲೂ.ಮತ್ತೆ ಅಂತರಾತ್ಮದ ಹೊನಲು ಕೇಕೆ ಹಾಕುತ್ತದೆ. ಕಾಡುವ ಕನಸುಗಳು ಘಳಿಗೆಗೆ ಒಮ್ಮೆನೆನಪಿನ ನೀರುಣಿಸಿ ಈಗೀಗ ಸಾಕುತ್ತಿದ್ದೇನೆ.ಹರಿದು ಬರುವ ನೀರಿಗೆ ಆಣೆಕಟ್ಟು ಕಟ್ಟಿದಂತೆ,ನದಿಯನ್ನು ದಾಟಲು ಸೇತುವೆಯಂತೆ,ಕ್ಷಣಕ್ಷಣವೂ ಉಸಿರು ನುಂಗಿ, ಜೀವಿಸಿ.ಮೊಳಕೆ ಒಡೆದ ಸಸಿಯಂತೆ, ಹೂವು ಅರಳಿಸುವಂತೆಮತ್ತೆ ನನಗೆ ನಾನೇ ಸಾಕ್ಷಿ ರೂಪವಾಗಿ ಬದುಕುತ್ತಿದ್ದೇನೆ ಕನಸಿಗಾಗಿ. ಜೊತೆಯಾಗಿ ಬರುತ್ತೇನೆ,ಉಸಿರಿಗೆ ಉಸಿರಾಗಿ ಇರುತ್ತೇನೆನಿನ್ನ ತಲೆ ಬೆನ್ನಿಗೆ ಬಿಂಬವಾಗಿರುತ್ತೇನೆ, ಎಂದುಬಂದವನು ನಿನ್ನ ಋಣ ತೀರಿತ್ತೆಂದುಬಂದ ದಾರಿಗೆ ನಡೆದು ಬಹುದೂರ ಹೋಗಿದ್ದಾಯಿತು.ಆಗ ಕಟ್ಟಿದೆಲ್ಲವೂ ಬರೀ ಉಳಿದ ಖಾಲಿ ಕನಸುಗಳು. ಬಯಲು ಆಲಯವು ಒಂದಾದಂತೆಆ ಬೇಸುಗೆಯೂ ಬೇಸತ್ತು ಕಂಗಾಲಾಗಿಸಾಗಿ ಸಾಗಿ ಹಾರಿ ಹೋದಿದ್ದಾಯಿತು.ನನ್ನ ಪ್ರಜ್ಞಾಪೂರಿತ ಸಾಕ್ಷಿಯ ಕನಸು,ವಾಸ್ತವಿಕತೆಯೂ ಮನಸುನನ್ನ ತಲೆದಿಂಬಿನೊಳಗೆ ಜೋಪಾನವಾಗಿಯೇ ಮಲಗಿತ್ತು. *****************************************

ತಲೆದಿಂಬಿನೊಳಗೆ ಅವಿತ ನಾ Read Post »

ಕಾವ್ಯಯಾನ

ಮರ್ದಿನಿ ಆಗಲಿಲ್ಲ

ಕವಿತೆ ಮರ್ದಿನಿ ಆಗಲಿಲ್ಲ ಡಾ.ಶಿವಕುಮಾರ್ ಮಾಲಿಪಾಟೀಲ ನಾಲ್ಕಾರು ಜನರು ಅತ್ಯಾಚಾರಕ್ಕೆ ಮುಂದಾದಾಗಮನಿಷಾ,ಮಹಿಷಾಸುರ ಮರ್ದಿನಿ ಆಗಲಿಲ್ಲ ನಿನ್ನ ಗರ್ಭದಲ್ಲಿ ಹುಟ್ಟಿದರೂನಿನ್ನನ್ನು ಗರ್ಭಗುಡಿಗೆ ನಿಷೇಧಿಸಿದಾಗ ಹೆಣ್ಣುಕಾಳಿಯಾಗಲಿಲ್ಲ ವರದಕ್ಷಿಣೆಗಾಗಿ ಅವಮಾನಿಸಿಹಿಂಸೆ ಕೊಟ್ಟುಕೊಲೆ ಮಾಡುವಾಗ ಹೆಣ್ಣುದುರ್ಗೆ ಆಗಲಿಲ್ಲ ಹೆಣ್ಣು ಬೇಡವೆಂದುಭ್ರೂಣವನ್ನು ಗರ್ಭದಲ್ಲೇಕತ್ತರಿಸಲು ಬಂದಾಗ ಹೆಣ್ಣು ಚಾಮುಂಡಿ ಆಗಲಿಲ್ಲ ಮಹಾ ಗ್ರಂಥಗಳಲ್ಲಿ ಮರುಳಾಗಿಕಲೆ ,ಶಿಲೆಗಳಲ್ಲಿ ಗೊಂಬೆಯಾಗಿಗುಡಿ ಗುಂಡಾರದಲ್ಲಿ ಕುಂಕುಮ ಭಂಡಾರವಾಗಿ ಹೆಸರಿಗೆಅರ್ಧ ನಾರೇಶ್ವರಿ…ಆಗಿದ್ದು ಮಾತ್ರ ದೇವದಾಸಿ. ಕಾಡು ಮೇಡುಗಳಲ್ಲಿಚೆಲ್ಲಿದ ಹೆಣ್ಣಿನ ರಕ್ತದ ಕಲೆಗಳನ್ನು ನೋಡಿಭೂ ತಾಯಿ ಬಿರುಕೊಡೆಯಲಿಲ್ಲಗಂಗೆ,ತುಂಗೆ,ಕಾವೇರಿ,ಗೋದಾವರಿ ಎಲ್ಲಾ ಹೆಣ್ಣುಹೆಸರಿನ ನದಿಗಳು ಬರಿದಾಗಲಿಲ್ಲ ಸಾಕ್ಷಿಗಳಿದ್ದರೂಅಪರಾಧಿಗಳಿಗೆ ಶಿಕ್ಷೆ ಇಲ್ಲ..ನಿರಪರಾಧಿಯಾಗಿ ಬಂದವರನ್ನುನೋಡಿ ಓಡುತ್ತಿವೆ ಪ್ರಾಣಿಗಳುಮೃಗಗಳು ಬಂದವೆಂದು… ಮಹಾಭಾರತದಲ್ಲಿ ಅವಮಾನರಾಮಾಯಣದಲ್ಲಿ ಅನುಮಾನನವಭಾರತದಲ್ಲಿ ಅತ್ಯಾಚಾರದ ಬಹುಮಾನ ? ನಾಗರೀಕರಾಗದೆಎಷ್ಟು ಮುಂದುವರಿದರೇನು?ಮನುಷ್ಯತ್ವ ಇರದಯಾವ ರಾಜ್ಯ ಕಟ್ಟಿದರೇನು? ಹೆಣ್ಣು ನಿಜ ದುರ್ಗೆ,ಚಾಮುಂಡಿ,ಕಾಳಿ,ಮರ್ದಿನಿಯಾಗದೆಶತ ಶತಮಾನದ ಈ ಅನ್ಯಾಯ ತಪ್ಪಿದ್ದಲ್ಲ.. **********************************

ಮರ್ದಿನಿ ಆಗಲಿಲ್ಲ Read Post »

ಇತರೆ

‘ಜೈ ಜವಾನ್, ಜೈ ಕಿಸಾನ್’

ಲೇಖನ ‘ಜೈ ಜವಾನ್, ಜೈ ಕಿಸಾನ್’ ಜಯಘೋಷದ ಲಾಲ್ ಬಹಾದ್ದೂರ್ ಶಾಸ್ತ್ರಿ ಇಂದು ಮಹಾತ್ಮ ಗಾಂಧಿ ಹುಟ್ಟಿದ ದಿನವೂ ಹೌದು. ಹಾಗೆಯೇ ಲಾಲ್ ಬಹಾದ್ದೂರ್ ಶಾಸ್ತ್ರೀಯ ಹುಟ್ಟು ಹಬ್ಬವೂ ಹೌದು. ಗಾಂಧಿ ಸ್ಮರೀಸಿ, ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಸ್ಮರಣೆ ಮಾಡದೇ ಬಿಟ್ಟರೆ ಅದು ಮಹಾ ತಪ್ಪಾಗುತ್ತದೆ. ಇಬ್ಬರೂ ರಾಷ್ಟ್ರದ ಹಿತ ಚಿಂತಕರು, ಆ ಕಾರಣಕ್ಕೆ ಈ ಇಬ್ಬರ ಒಂದೇ ದಿನದ ಹುಟ್ಟು ಹಬ್ಬದ ಸ್ಮರಣೆಯನ್ನು ಮಾಡೋಣ… ಇತರರಿಗೆ ಹೋಲಿಸಿದರೆ, ರಾಷ್ಟ್ರದ ಅತ್ಯುನ್ನತ ಹುದ್ದೆಗೆ ಹೊಸಬರಾಗಿದ್ದರೂ ಸಹ, 1965ರಲ್ಲಿ ಭಾರತ ಮತ್ತು ಪಾಕಿಸ್ಥಾನದ ನಡುವೆ ಜರುಗಿದ ಯುದ್ಧದಂತಹ ವಿಷಮ ಪರಿಸ್ಥಿತಿಯಲ್ಲಿಯೂ ಶಾಸ್ತ್ರೀಯವರು ದೇಶವನ್ನು ಯಶಸ್ವಿಯಾಗಿ ಮುನ್ನಡೆಸಿದವರು. ದೇಶದ ಪ್ರಧಾನಿಯಾಗಿದ್ದರೂ ಕೂಡ ಜನಸಾಮಾನ್ಯನಂತೆ ಇರುತ್ತಿದ್ದರು. ಜೀವನುದುದ್ದಕ್ಕೂ ಗಾಂಧೀ ಅನುಯಾಯಿಯಾಗಿ ಸತ್ಯ, ಅಹಿಂಸೆಯನ್ನು ಪ್ರತಿಪಾದಿಸಿ “ಶಾಂತಿದೂತ’ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದರು. ಇಂದಿನ ಯುವಕರಿಗೆ ಐಕಾನ್‌ ಆಗಬಲ್ಲ ಬದುಕು ಶಾಸ್ತ್ರೀಜಿ ಅವರದು. ಸರಳತೆ, ನೇರ ನಡೆನುಡಿ, ಶಿಸ್ತು, ಕರ್ತವ್ಯ ನಿಷ್ಠೆ ಹೀಗೆ ಮುಂತಾದ ಅವರ ಸನ್ಮಾರ್ಗಗಳು ನಮ್ಮ ಜೀವನಕ್ಕೆ ದಾರಿದೀಪವಾಗುತ್ತವೆ. ಒಂದು ಸದೃಢ ರಾಷ್ಟ್ರ ನಿರ್ಮಾಣದ ದಿಶೆಯಲ್ಲಿ, ಸ್ವಪೋಷಣೆ ಮತ್ತು ಸ್ವಾವಲಂಬನೆಗಳನ್ನು ಆಧಾರಸ್ತಂಭಗಳೆಂದು ಭಾವಿಸುವ ಆವಶ್ಯಕತೆಯನ್ನು ಮನಗಂಡು ಶಾಸ್ತ್ರೀಯವರು ಜೈ ಜವಾನ್‌ ಜೈ ಕಿಸಾನ್‌ಎಂಬ ಘೋಷವಾಕ್ಯವನ್ನು ಜನಪ್ರಿಯಗೊಳಿಸಿದರು. ಶಾಸ್ತ್ರೀಜಿ ಅವರ ಇಡೀ ಜೀವನವೇ ನಮಗೆ ಪ್ರೇರಣೆ. ಬಾಲ್ಯದಿಂದಲೇ ಸ್ವಾಭಿಮಾನ ಮತ್ತು ಅಚಲ ವ್ಯಕ್ತಿತ್ವದ ಶಿಖರವೆನಿಸಿದ ಶಾಸ್ತ್ರೀಜಿ, ರಾಷ್ಟ್ರದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಹಿಡಿದು, ರಾಷ್ಟ್ರ ರಾಜಕೀಯದಲ್ಲಿ ವಿವಿಧ ಸ್ತರದ ಜವಾಬ್ದಾರಿಗಳನ್ನು ನಿರ್ವಹಿಸುವವರೆಗೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ನಿರಾಡಂಬರವಾದ ಅವರ ನಿಲುವುಗಳ ಮೂಲಕ ಜನರ ಹೃದಯ ಸಿಂಹಾಸನದಲ್ಲಿ ಶಾಶ್ವತವಾಗಿ ನೆಲೆನಿಂತಿದ್ದಾರೆ. ಶಾಸ್ತ್ರೀಜಿ ಅವರು ಕೇಂದ್ರ ರೈಲ್ವೇ ಸಚಿವರಾದ ಸಂದರ್ಭ ತೋರಿದ ನೈತಿಕ ಜವಾಬ್ದಾರಿ ಪ್ರಸ್ತುತದ ವರೆಗೂ ರಾಜಕಾರಣಿಗಳಿಗೆ ಆದರ್ಶವಾಗುವಂತದ್ದು. 1956ರಲ್ಲಿ ಆಗಿನ ಆಂಧ್ರ ಪ್ರದೇಶದ ಅರಿಯಳೂರಲ್ಲಿ ಜರುಗಿದ ರೈಲ್ವೆ ಅಪಘಾತದಿಂದಾಗಿ 144 ಜನ ಸಾವನ್ನಪ್ಪಿದರು. ಇದರಿಂದ ಹತಾಶರಾದ ಶಾಸ್ತ್ರೀಜಿ ನೈತಿಕ ಜವಾಬ್ದಾರಿಯ ಕಾರಣ ನೀಡಿ ರಾಜೀನಾಮೆ ನೀಡಿದರು. ಇಂತಹ ಆದರ್ಶವನ್ನು ಮೆರೆದ ಅಪರೂಪದ ವ್ಯಕ್ತಿತ್ವ ಅವರದು. ಆದರೆ ಈಗಿನವರಲ್ಲಿ ಇಂತಹ ನಿರ್ಧಾರಗಳನ್ನು ನಾವು ಎದುರು ನೋಡಬಹುದೆ? ರಕ್ಷಣಾ ನಿಧಿಗೆ ವೈಯಕ್ತಿಕ ವ್ಯಕ್ತಿಯೋರ್ವನ ಅತ್ಯಧಿಕ ಕೊಡುಗೆ ಸಾಕ್ಷಿ– ಪ್ರಧಾನಿಯಾದ ಅನಂತರ ಆರ್ಥಿಕ ಸ್ಥಿತಿಯನ್ನು ಸದೃಢಗೊಳಿಸುವ, ಭಾರತೀಯ ಸೇನೆಯನ್ನು ಸಶಕ್ತಗೊಳಿಸುವ ಮತ್ತು ಕೃಷಿ ಕ್ಷೇತ್ರವನ್ನು ಸ್ವಾವಬಂಭಿಯನ್ನಾಗಿಸುವ ಕಾರ್ಯದಲ್ಲಿ ನಿರತರಾದರು. ಕ್ಷೀರ ಕ್ರಾಂತಿ ಮತ್ತು ಹಸುರು ಕ್ರಾಂತಿಗೆ ಮುನ್ನುಡಿ ಬರೆದರು. ಸೇನಾ ಅಭಿವೃದ್ಧಿಗಾಗಿ ಹಗಲಿರುಳು ದುಡಿದರಲ್ಲದೆ ಹೈದರಾಬಾದ್‌ನ ನಿಜಾಮನ ಬಳಿ ಸಹಾಯ ಕೇಳಿದಾಗ ಆತ 5 ಸಾವಿರ ಕೆ.ಜಿ. ಚಿನ್ನವನ್ನು ರಾಷ್ಟ್ರೀಯ ರಕ್ಷಣಾ ನಿಧಿಗೆ ನೀಡುತ್ತಾನೆ. ಇಲ್ಲಿಯವರೆಗೂ ಇದು ರಾಷ್ಟ್ರೀಯ ರಕ್ಷಣಾ ನಿಧಿಗೆ ವ್ಯಕ್ತಿಯೋರ್ವನ ಅತ್ಯಧಿಕ ಕೊಡುಗೆಯಾಗಿದೆ ಎನ್ನುವುದು ವಿಶೇಷ. ಇದು ರಾಷ್ಟ್ರದ ಹಿತಕ್ಕಾಗಿ ನೀಡಿದ ದೇಣಿಗೆ ಮಾತ್ರವಲ್ಲದೆ ಪ್ರಧಾನಿಯ ಮಾತಿಗೆ ಕೊಟ್ಟ ಗೌರವವಲ್ಲದೆ ಮತ್ತೇನು. ಶಾಂತ ಸ್ವರೂಪಿ ಶಾಸ್ತ್ರೀಜಿ ಜನತೆಗೆ ಹೆಚ್ಚು ಆಪ್ತವಾದದ್ದು ತಮ್ಮ ಕಾರ್ಯವೈಖರಿಯ ಮೂಲಕ ಮಾತನಾಡಿದಾಗ! ಜಗತ್ತು ನಿಬ್ಬೆರಗಾಗುವಂತಹ ನಿರ್ಣಯಗಳನ್ನು ಕೈಗೊಂಡಾಗ! 1962ರಲ್ಲಿ ಚೀನ ವಿರುದ್ಧದ ಯುದ್ಧದಲ್ಲಿ ಭಾರತ ಸೋಲಬೇಕಾಯಿತು. 1947-48ರ ಯುದ್ಧದಲ್ಲಾದ ಮುಖಭಂಗಕ್ಕೆ ಪರಿಹಾರವನ್ನು ಪಡೆದುಕೊಳ್ಳಲೋ ಅಥವಾ ಶಾಂತ ಮತ್ತು ವಾಮನಾಕಾರನಾದ ಪ್ರಧಾನಿ ಇರುವುದನ್ನು ಕಂಡೋ ಪಾಕಿಸ್ಥಾನ ಭಾರತದ ಮೇಲೆ 1965ರಲ್ಲಿ ಯುದ್ಧ ಸಾರಿತು. ಜಮ್ಮು-ಕಾಶ್ಮೀರಕ್ಕೆ ಮುತ್ತಿಗೆ ಹಾಕಿದ ಪಾಕಿಸ್ಥಾನಕ್ಕೆ ಅಚ್ಚರಿಯ ರೀತಿಯಲ್ಲಿ ಲಾಹೋರ್‌ ಅತಿಕ್ರಮಣದ ಮೂಲಕ ಉತ್ತರಿಸಿದರು. ಅಷ್ಟೇ ಅಲ್ಲದೆ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರವನ್ನು ನೀಡಿ, ಗಡಿ ದಾಟುವ ಆವಶ್ಯಕತೆ ಬಿದ್ದರೆ ಹಿಂಜರಿಯದೆ ಒಳನುಗ್ಗಿ, ಅಂತಾರಾಷ್ಟ್ರೀಯ ಸಂಬಂಧದ ಕುರಿತು ಚಿಂತಿಸಬೇಡಿ ಎಂದು ಧೈರ್ಯ ತುಂಬಿದರು. ಅದರ ಪರಿಣಾಮವಾಗಿ ಲಾಹೋರ್‌, ಹಾಜಿ ಪಿರ್‌ ಪಾಸ್‌ ಮತ್ತು ಸಿಯಾಲ್‌ ಕೋಟ್‌ನಲ್ಲಿ ನಮ್ಮ ಸೇನೆ ಪಾಕಿಸ್ಥಾನವನ್ನು ಹಿಮ್ಮೆಟ್ಟಿಸಿತ್ತು. ಅಮೆರಿಕದಿಂದ ಗೋಧಿಯ ಸರಬರಾಜು ನಿಂತಿತು ಈ ಯುದ್ಧದ ಸಂದರ್ಭ ಶಾಸ್ತ್ರೀಜಿಗೆ ಎದುರಾದ ಸವಾಲುಗಳು ಒಂದೆರಡಲ್ಲ. ಪಾಕಿಸ್ಥಾನದ ವಿರುದ್ಧ ತಿರುಗಿಬಿದ್ದ ಕಾರಣಕ್ಕಾಗಿ ಅಮೆರಿಕದಿಂದ ಬರಬೇಕಾದ ಗೋಧಿಯ ಸರಬರಾಜು ನಿಂತಿತು. ಶಾಸ್ತ್ರೀಜಿ ಹಸುರು ಕ್ರಾಂತಿಗೆ ಕರೆಕೊಟ್ಟಿದ್ದು ಆಗಲೇ. ಅಲ್ಲಿಯವರೆಗೂ ಆಹಾರದ ಕೊರತೆಯನ್ನು ನೀಗಿಸುವುದಕ್ಕಾಗಿ ರಾಷ್ಟ್ರದ ಜನತೆಗೆ ಸೋಮವಾರದ ಉಪವಾಸವನ್ನು ಆಚರಿಸುವಂತೆ ಭಿನ್ನಹ ಮಾಡಿದರು. ಅದಕ್ಕೆ ಇಡೀ ರಾಷ್ಟ್ರ ಸ್ಪಂದಿಸುವುದರ ಹಿಂದಿದ್ದ ಆ ವ್ಯಕ್ತಿಯ ನೈತಿಕ ಮೌಲ್ಯ ಎಂಥಹದು ಯೋಚಿಸಿ. ಕೇವಲ ನುಡಿದ್ದಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ. ಬದಲಾಗಿ ಹೇಳಿದ್ದನ್ನು ಪಾಲಿಸಿದ್ದರಿಂದ ರಾಷ್ಟ್ರವ್ಯಾಪಿ ಬೆಂಬಲ ವ್ಯಕ್ತವಾಯಿತು. ಶಾಸ್ತ್ರೀಜಿ ಎಲ್ಲರಿಗೂ ಹತ್ತಿರವಾಗುವುದು ಏಕೆ?– ಈ ಪ್ರಶ್ನೆಗೆ ಉತ್ತರ ಅವರ ಸರಳತೆ ಎನ್ನುವ ಪ್ರಭಾವಲಯ ಎಲ್ಲರನ್ನು ಸರಳವಾಗಿಯೇ ಆಕರ್ಷಿಸುತ್ತದೆ ಎನ್ನುವುದು. ಭಾರತದ ಅತ್ಯಂತ ಹೆಚ್ಚು ಜನಸಂಖ್ಯೆವುಳ್ಳ ರಾಜ್ಯದ ಗೃಹಮಂತ್ರಿಯಾಗಿದ್ದರೂ ಅವರಿಗೆ ಸ್ವಂತ ಮನೆ ಇರಲಿಲ್ಲ! ಆದ್ದರಿಂದಲೇ ಅವರನ್ನು Homeless Home Minister ಎಂದೂ ಇತರೆ ನಾಯಕರು ಕರೆಯುತ್ತಿದ್ದರು. ರಾಷ್ಟ್ರದ ಪ್ರಧಾನಿಯಾದಾಗಲೂ ಸ್ವಂತದೊಂದು ವಾಹನ ಇರಲಿಲ್ಲ! ಸರಕಾರಿ ವಾಹನವನ್ನು ಮನೆಯ ಕೆಲಸಕ್ಕಾಗಿ ಬಳಸುತ್ತಿರಲಿಲ್ಲ! ಮನೆಯವರೆಲ್ಲರ ಒತ್ತಾಯದಿಂದಾಗಿ ಕಾರು ಖರೀದಿಸಲು ನಿರ್ಧರಿಸಿದ ಶಾಸ್ತ್ರೀಜಿ ಪಿ.ಎನ್‌.ಬಿ. ಬ್ಯಾಂಕ್‌ನಲ್ಲಿ 5,000 ರೂ. ಲೋನ್‌ ಮಾಡಬೇಕಾಯಿತು! ಆದರೆ ದುರ್ದೈವದ ಸಂಗತಿ ಎಂದರೆ ಆ ಲೋನ್‌ ತೀರಿಸುವ ಮುಂಚೆಯೇ ಶಾಸ್ತ್ರೀಜಿ ಸಾವನ್ನಪ್ಪಿ ರಾಷ್ಟ್ರವನ್ನು ಅಗಲಿದರು. ನದಿ ಈಜಿದ್ದ ಶಾಸ್ತ್ರೀಜಿ– ಲಾಲ್‌ ಬಹದ್ದೂರ್‌ ಶಾಸ್ತ್ರೀಜಿ ಅವರು ಹುಟ್ಟು ಧೈರ್ಯವಂತ. ಇದೇ ಧೈರ್ಯದೊಂದಿಗೆ ಪಾಕಿಸ್ಥಾನದೊಂದಿಗೆ ಯುದ್ಧಕ್ಕಿಳಿದಿದ್ದರು. ಅವರು ತಮ್ಮ ಚಿಕ್ಕ ವಯಸ್ಸಿನಲ್ಲಿ ತಮ್ಮ ಸ್ನೇಹಿತನ ಮನೆಗೆ ನದಿ ದಾಟಿ ಹೋಗಬೇಕಾಗಿರುತ್ತದೆ. ದೋಣಿಯಲ್ಲಿ ಹೋಗಿದ್ದ ಅವರು ವಾಪಸು ಆಗುವಾಗ ದೋಣಿಯಲ್ಲಿ ಬರಲು ಅವರಲ್ಲಿ ದುಡ್ಡು ಇರುವುದಿಲ್ಲ. ಆಗ ಅವರು ದೋಣಿಗಾಗಿ ಕಾಯದೇ, ದುಡ್ಡಿಗಾಗಿ ಇನ್ನೊಬ್ಬರನ್ನು ಕೇಳದೇ ತುಂಬಿ ಹರಿಯುತ್ತಿದ್ದ ನದಿಗೆ ಧುಮುಕುತ್ತಾರೆ. ನದಿಯನ್ನು ಈಜಿ ದಡ ಸೇರುತ್ತಾರೆ. ಸೆಳೆತ, ಸುಳಿ, ನೀರಿನ ರಭಸ ಯಾವುದನ್ನು ಲೆಕ್ಕಿಸದೇ ಧೈರ್ಯದಿಂದ ನದಿ ದಾಟಿದ್ದರು. ಪರಿಸ್ಥಿತಿಯಲ್ಲಿ ಒದಗಿಬರುವ ಸಮಸ್ಯೆಗಳಿಗೆ ನಮ್ಮ ಅಚಲ ಧೈರ್ಯವೇ ಉತ್ತರ ನೀಡುತ್ತದೆ ಎಂಬುದಕ್ಕೆ ಶಾಸ್ತ್ರೀಜಿ ಅವರ ಈ ಘಟನೆ ನಮಗೆ ಸ್ಫೂರ್ತಿಯಾಗಬಲ್ಲದು. ನೇರ ನಡೆತೆ, ನಿಷ್ಠೆ– ಶಾಸ್ತ್ರೀಜಿ ಅವರು ಪ್ರಧಾನಿಯಾದರು ಉಡುಗೆ, ನಡೆಯಲ್ಲೂ ಸರಳವಾಗಿರುತ್ತಿದ್ದರು. ಒಮ್ಮೆ ಅವರ ಹೆಂಡತಿಗೆಂದು ಸೀರೆ ತರಲು ಅಂಗಡಿಗೆ ಹೋದಾಗ ಅಂಗಡಿಯವರು ಸೀರೆಯನ್ನು ಉಚಿತವಾಗಿ ಕೊಡಲು ಬಂದಾಗ ಅದನ್ನು ತೆಗೆದುಕೊಳ್ಳದೇ ದುಡ್ಡು ನೀಡಿ, ಹೆಂಡತಿಗೆ ಸೀರೆ ತೆಗೆದುಕೊಂಡು ಕೊಡುತ್ತಾರೆ. ಎಂದಿಗೂ ತಾನು ಪ್ರಧಾನಿ ಎಂಬ ಹಮ್ಮು-ಬಿಮ್ಮು ಇಲ್ಲದೇ, ಅಧಿಕಾರ ದುರುಪಯೋಗ ಮಾಡಿಕೊಳ್ಳದೇ ನೇರ, ನಿಷ್ಠೆಯಿಂದ ಇದ್ದವರು ಶಾಸ್ತ್ರೀಜಿ. ****************************************** ಕೆ.ಶಿವು.ಲಕ್ಕಣ್ಣವರ

‘ಜೈ ಜವಾನ್, ಜೈ ಕಿಸಾನ್’ Read Post »

ಇತರೆ

ಮಹಾತ್ಮಾಗಾಂಧೀಜಿಯವರ ಚಿಂತನೆಗಳ ಪ್ರಸ್ತುತತೆ :

ಲೇಖನ ಮಹಾತ್ಮಾಗಾಂಧೀಜಿಯವರ  ಚಿಂತನೆಗಳ ಪ್ರಸ್ತುತತೆ : “ಹಸಿದ ಹೊಟ್ಟೆಯವನಿಗೆ ಯಾವ ಉಪದೇಶವೂ ಮುಖ್ಯವಲ್ಲ” ಪಾಪವನ್ನು ದ್ವೇಷಿಸಿ ಪಾಪಿಯನ್ನಲ್ಲ” ಇವು ನಮ್ಮ ನೆಚ್ಚಿನ ಬಾಪೂಜಿಯವರ ನುಡಿಮುತ್ತುಗಳು.”ಅಯ್ಯಾ ನೀನೇನು ದೇವರಲ್ಲ, ಆದರೆ ದೇವರನ್ನು ಬಲವಾಗಿ ನಂಬಿದವನು, ದಂತವಿಲ್ಲದಿದ್ದರೂ ಬದುಕಿದ್ದ ಕಾಲದಲ್ಲೇ ದಂತಕಥೆಯಾದವನು” ಇವು  ಮಹಾತ್ಮಾ ಗಾಂಧೀಜಿಯವರ ಕುರಿತು ಕವಿ ಸಿ.ಪಿ.ಕೆ.ತಮ್ಮ ವಂದನೆ ಕವಿತೆಯಲ್ಲಿ ಮನೋಜ್ಞವಾಗಿ ಮೂಡಿಸಿದ ಸಾಲುಗಳು. ಮೋಹನದಾಸ ಕರಮಚಂದ ಗಾಂಧಿ ಎಂಬ ಬಾಲಕ ಯಾರಿಗೂ ನಿಲುಕದ ಅತಿಮಾನವನೇನೂ ಆಗಿರಲಿಲ್ಲ. ಎಲ್ಲರಂತೆಯೇ ಹುಟ್ಟಿ ಬೆಳೆದ ಒಬ್ಬ ಸಾಮಾನ್ಯ ಮಗು. ಅವರ ಬಾಲ್ಯ ಕೂಡ ಎಲ್ಲ ಮಕ್ಕಳ ಬಾಲ್ಯದಂತೆಯೇ ಇತ್ತು.ಗುಜರಾತಿನ ಕಾಥೇವಾಡ ಪ್ರಾಂತ್ಯದ ಪೋರ್ ಬಂದರ್ ನಲ್ಲಿ ೧೮೬೯ ರ ಅಕ್ಟೋಬರ್ ೨ ರಂದು ಸಹೃದಯ ಕರಮಚಂದ ಗಾಂಧಿ ಹಾಗೂ ದೈವ ಭಕ್ತೆ ಪುತಲೀಬಾಯಿಯವರಿಗೆ ಭಾವೀ ದಂತಕಥೆಯಾದ ಮೋಹನದಾಸನ ಜನನವಾಯಿತು. ಮೋಹನದಾಸರನ್ನು ಬಾಲ್ಯದಲ್ಲಿ ಮನೆಯವರು ಪ್ರೀತಿಯಿಂದ ಮೋನಿಯಾ ಎಂದು  ಕರೆಯುತ್ತಿದ್ದರಂತೆ .ಮೋನಿಯಾ ಕೂಡ ಎಲ್ಲರಂತೆ ತಂಟೆ ಮಾಡುತ್ತಿದ್ದನಂತೆ, ಹಠವಾದಿಯಾಗಿದ್ದನಂತೆ ಸುಳ್ಳು ಹೇಳಿದ್ದ, ಓದಿನಲ್ಲಿ ಸಾಮಾನ್ಯ ವಿದ್ಯಾರ್ಥಿಯಾಗಿದ್ದ.ಒಮ್ಮೆ ಸ್ನೇಹಿತರ ಒತ್ತಾಯಕ್ಕೆ ಮಣಿದು ಧೂಮಪಾನ ಮಾಡಿದ್ದನಂತೆ , ಮಾಂಸ ಸೇವಿಸಿದ್ದನಂತೆ.  ಆದರೆ ಮಾಡಿದ ತಪ್ಪುಗಳಿಗೆ ಪಶ್ಚಾತಾಪ ಪಟ್ಟು ಶ್ರವಣಕುಮಾರ, ಸತ್ಯ ಹರಿಶ್ಚಂದ್ರರ ಕಥೆಗಳಿಂದ ಪ್ರಭಾವಿತರಾಗಿ ತನ್ನ ಬದುಕನ್ನೇ ಬದಲಿಸಿಕೊಂಡು ಮಹಾನ್ ಚೇತನವಾಗಿ ಹೊಮ್ಮಿ ದಂತಕಥೆಯಾದ. ಗಾಂಧೀಜಿ ಚಿಂತನೆಗಳ ಬಗ್ಗೆ ಅವಲೋಕಿಸಿದಾಗ ,  ಗಾಂಧೀಜಿ ಜೀವನವೇ ಅವರ ಚಿಂತನೆ, ಅವರ ಚಿಂತನೆಯೇ ಅವರ ಜೀವನ.ಅವುಗಳಲ್ಲಿ ವ್ಯತ್ಯಾಸವಿಲ್ಲ..ಗಾಂಧೀಜಿಯವರು ಸತ್ಯ ಅಹಿಂಸೆ ಹಾಗೂ ಸೇವೆಯಲ್ಲಿ ಅಪಾರ ಶೃದ್ಧೆ ಇಟ್ಟಿದ್ದರು.ಸತ್ಯವೇ ಅವರ ಉಸಿರಾಗಿತ್ತು.ಅಹಿಂಸೆ ಹಾಗೂ ಸತ್ಯದ ನಡೆಯಿಂದ ಗಾಂಧೀಜಿ ಬದುಕಿ ತೋರಿಸಿದ್ದರು.ಅವುಗಳಿಂದಲೇ ಬ್ರಿಟಿಷರನ್ನು ಮಣಿಸಿ ಸ್ವಾತಂತ್ರ್ಯ ನೀಡುವಂತೆ ಮಾಡಿದ್ದರು.ಪಾರದರ್ಶಕತೆ ಗಾಂಧೀಜಿಯವರ ಬಹುಮುಖ್ಯಗುಣ.ಈ ವಿಶಿಷ್ಟ ಗುಣದಿಂದಲೇ ಜನಮನಗೆದ್ದ ನಾಯಕರಾದರು.ಗಾಂಧೀಜಿಯವರು ಮೂಲ ಶಿಕ್ಷಣಕ್ಕೆ ಹಚ್ಚಿನ ಒತ್ತು ನೀಡಿದ್ದರು.ಶೀಲವಿಲ್ಲದ ಶಿಕ್ಷಣ ತಪ್ಪು ಎಂದು ಭಾವಿಸಿದ್ದಅಂಗನೈತಿಕತೆಯ ನೆಲೆಗಟ್ಟಿಲ್ಲದ ಶಿಕ್ಷಣ ವಿನಾಶಕ್ಕೆ ಹಾದಿ ಎಂಬುದು ಗಾಂಧೀಜಿಯವರ ತತ್ವವಾಗಿತ್ತು. ಸರಳತೆ: ಸರಳತೆ ಗಾಂಧೀಜಿ ಜೀವನದ ಅವಿಭಾಜ್ಯ ಅಂಗವಾಗಿತ್ತು.ತೊಡುವ ಬಟ್ಟೆ, ಆಹಾರ ಪದ್ಧತಿ ಎಲ್ಲವೂ ಸರಳವಾಗಿದ್ದವು.” Simplicity is the Essence of Universality” ಎಂಬುದು ಅವರ ತತ್ವವಾಗಿತ್ತು.ಸಮಾಜ ಸೇವೆಯಲ್ಲಿ ನಿರತನಾದ ವ್ಯಕ್ತಿ ಸರಳತೆ ಹಾಗೂ ಸ್ವಾವಲಂನೆಯನ್ನು ಅನುಸರಿಸಬೇಕೆಂದು ನಂಬಿದ್ದರು ಗಾಂಧೀಜಿ.ದಕ್ಷಿಣ ಆಫ್ರಿಕೆಯಿಂದ ಹಿಂದಿರುಗಿದ ಭಾರತಕ್ಕೆ ಮರಳಿ ನಮಗೆ ಸ್ವಾತಂತ್ರ್ಯ ತಂದುಕೊಡುವ ಹೊತ್ತಿಗೆ ಅವರ ಉಡುಗೆ ಒಂದು ತುಂಡಿನ ಮುಂಡ(ಲುಂಗಿ) ಕೈ ಯಲ್ಲೊಂದು ಕೋಲು ಇದಕ್ಕಿಂತ ಸರಳವಾಗಿರಲು ಒಬ್ಬ ಮನುಷ್ಯನಿಗೆ ಸಾಧ್ಯವೆ?ಸರಳತೆ ಹಾಗೂ ಸ್ವವಲಂಬನೆಗೆ ಕಲಶವಿಟ್ಟಂತೆ ತಾವೇ ಸ್ವತಃ ಬಡಗಿ, ಕ್ಷೌರಿಕ, ಚಮ್ಮಾರ, ನೇಕಾರ, ಸೇವಕ, ಬಾಣಸಿಗರಾದರು.ಈ ಮೂಲಕ ನೈತಿಕತೆಯಿಂದ ಕೂಡಿದ ಯಾವ ಕೆಲಸವೂ ಮೇಲಲ್ಲ , ಕೀಳಲ್ಲ ಎಂದು ತೋರಿಸಿದರು . “ಇರುವ ಕೆಲಸವ ಮಾಡು ಕಿರಿದೆನದೆ ಮಾಡು” ಎಂಬ ಶರಣವಾಣಿಗನುಸಾರವಾಗಿ ಗಾಂಧೀಜಿ ಬದುಕಿದರು. ದುಬಾರಿಯಾದ ಆಡಂಬರದ ಜೀವನ ನಡೆಸಿ ದುಂದುವೆಚ್ಚ ಮಾಡುವ ಇಂದಿನ ಜನಾಂಗಕ್ಕೆ ಗಾಂಧೀಜಿ ಹೆಚ್ಚು ಪ್ರಸ್ತುತ.ಇಂದು ಕೊರೊನಾದಂತಹ ಮಹಾಪಿಡುಗಿನ ಈ ಸಂದರ್ಭದಲ್ಲಿ ಗಾಂಧಿಜೀಯವರ ಸರಳಜೀವನ, ಸ್ವಾವಲಂಬನೆಗೆ ಹೆಚ್ಚಿನ ಒತ್ತು ಸಿಕ್ಕಿದೆ. ಸರಳ ಮದುವೆ, ಸರಳಸಭೆಸಮಾರಂಭಗಳು,  ಸರಳ ಆಹಾರ, ಸರಳ ಜೀವನದ ಪಾಲನೆಯ ಅವಶ್ಯಕತೆ ಗಾಂಧಿ ಕಾಲಕ್ಕಿಂತ ಈಗ ಅನಿವಾರ್ಯ ಹಾಗೂ ಅವಶ್ಯಕ.ಅವರ ಸರಳತೆ ಹಾಗೂ ಸ್ವಾವಲಂಬನೆ ಸಾರ್ವತ್ರಿಕತೆ ಹಾಗೂ ಸರ್ವೋದಯದ ಮೂಲ ತತ್ವವಾಗಿದೆ.ಎಲ್ಲವನ್ನು ಯಂತ್ರ ಅಥವಾ ಕೆಲಸದಾಳುಗಳ ಮೂಲಕ ಮಾಡಿ ಶ್ರಮಕಡಿಮೆಮಾಡಿಕೊಂಡು ಆಲಸಿಗಳಾಗುತ್ತಿರುವ ಇಂದಿನ ಜನಾಂಗಕ್ಕೆ ಗಂಧಿ ವಿಚಾರಗಳು ಹೆಚ್ಚು ಪ್ರಸ್ತುತ. ಧರ್ಮ ಸಹಿಷ್ಣುತೆ : ಧರ್ಮ ಸಹಿಷ್ಣುತೆ ಯು ಬಾಪೂಜಿ ಜೀವನದ ಅವಿಭಾಜ್ಯ ಅಂಗ.ಅವರೇ ತಮ್ಮ ಕಥೆಯಲ್ಲಿ ಹೇಳಿರುವಂತೆ “ನನಗೆ ಸ್ಕೂಲಿನಲ್ಲಿ ಯಾವ ಧರ್ಮಿಕ ಶಿಕ್ಷಣವೂ ದೊರೆಯಲಿಲ್ಲ, ಸುತ್ತಲಿನ ವಾತಾವರಣದಿಂದಲೇ ನಾನು ಅಷ್ಟು ಇಷ್ಟು ಧರ್ಮ ಭಾವನೆ ಹೊಂದಿದ್ದೆ.ನನ್ನ ಪ್ರಕಾರ ಧರ್ಮ ಎಂದರೆ, ಆತ್ಮ ಸಾಕ್ಷಾತ್ಕಾರ, ಆತ್ಮಜ್ಞಾನ.” ಗಾಂಧೀಜಿ ಎಲ್ಲ ಧರ್ಮವನ್ನು ಪ್ರೀತಿಸಲು , ಗೌರವಿಸಲು ಅವರ ಬಾಲ್ಯದ ಪರಿಸರವೂ ಕಾರಣವಾಗಿತ್ತು.ಅವರ ದೆಕರಮಚಂದರಿಗೆ ಎಲ್ಲ ಧರ್ಮದ ಮಿತ್ರರೂ ಇದ್ದರಂತೆ. ಭಗವದ್ಗೀತೆ, ಬುದ್ಧಚರಿತೆ, ಬೈಬಲ್, ಪೈಗಂಬರ್ ಚರಿತ್ರೆಮೊದಲಾದ ಧರ್ಮಗ್ರಂಥಗಳ ಆಳವಾದ ಅಧ್ಯಯನದಿಂದ ಎಲ್ಲ ಧರ್ಮಗಳ ಮೂಲತತ್ವಗಳೂ ಒಂದೇ ಎಂದು ತಿಳಿದು ಧರ್ಮಸಹಿಷ್ಣುವಾದರು. ಜಾತಿ ,ಮತ, ಧರ್ಮ ಕುಲ ವೆಂದು ಹೊಡೆದಾಡಿಕೊಳ್ಳುವ , ಮನುಷ್ಯ ಮನುಷ್ಯರನ್ನು ಶತ್ರುಗಳಂತೆ ಕಾಣುವ ಈ ಅಣ್ವಸ್ತ್ರ ಯುಗದಲ್ಲಿ ರಾಮ,ರಹೀಮ, ಏಸಶಿಕ್ಷಣದ್ಧ ಎಲ್ಲರೂ ಒಂದೇ ಎನ್ನುವ ಸರ್ವ ಧರ್ಮ ಸಹಿಷ್ಣುತಾ ಭಾವವು ಏಕತೆಯನ್ನು ಬೆಳೆಸಬಲ್ಲುದು. ಇಂದು ಎಷ್ಟೋ ಧರ್ಮಸಂಘರ್ಷಗಳನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ.ಅದನ್ನೆಲ್ಲ ಮರೆತು ಬದುಕುವ ಕಾಲವನ್ನು ಕೊರೊನಾ ತಂದಿದೆ. ಎಲ್ಲರೂ ಒಂದೇ ಎಂಬ ಭಾವ ಹಿಂದಿಗಿಂತ ಇಂದು ಪ್ರಸ್ತುತ. ಸಮಗ್ರ ಶಿಕ್ಷಣ : ಗಾಂಧಿಜೀಯವರು ಸಮಗ್ರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ಅವರ ಪ್ರಕಾರ ಶಿಕ್ಷಣವೆಂದರೆ ಮಗುವನ್ನು ಮಾನವನನ್ನಾಗಿಸುವ ಸರ್ವತ್ರ ಸಾಧನ.ದೇಹ ಮೆದುಳು ಚೈತನ್ಯ ಎಲ್ಲವನ್ನು ರೂಪಿಸುವುದೇ ಆಗಿದೆ.ಸಮಾಜದ ಸಪ್ತ ಮಹಾಪಾತಕಗಳಲ್ಲಿ ಒಂದಾದ ” ಶೀಲವಿಲ್ಲದ ಶಿಕ್ಷಣ ” ದಿಂದ ಸಮಾಜದ ಪತನವಾಗುತ್ತದೆ. ಎಂದು ನಂಬಿದ್ದರು ಗಾಂಧಿ.ಸಮಗ್ರತೆ, ಕಠಿಣ ಪರಿಶ್ರಮ ಹಾಗೂ ಇಚ್ಛಾಶಕ್ತಿ ಇಲ್ಲದ ಮಕ್ಕಳು ಉಪ್ಪಿಲ್ಲದ ಆಹಾರದಂತೆ. ಇಂದು ನಾವುಕಾಣುವುದು ಇಂಥ ಉಪ್ಪಿನ ಕೊರತೆಯಿರುವ ವಿದ್ಯಾರ್ಥಿಗಳನ್ನು.ಗಾಂಧೀಜಿಯವರು ಕಸುಬು ಆಧಾರಿತ ಕರಕುಶಲ ಕಲೆಯ ಕಲಿಕೆಗೆ ಹೆಚ್ಚು ಒತ್ತನೀಡಿದ್ದರು ಅವುಗಳಲ್ಲಿ ತೋಟಗಾರಿಕೆ, ನೇಕಾರಿಕೆ, ಕೃಷಿ ಮರದ ಕೆಲಸ ಮಡಕೆ ಮಾಡುವಂತಹ ಸ್ವಾವಲಂಬನೆಯ ಕೆಲಸಗಳು ಸೇರಿದ್ದವು . ಇದರಿಂದ ಶಾರೀರಿಕ ಶಿಕ್ಷಣ  ಸ್ವಾಭಾವಿಕವಾಗಿಯೇ ಸಿಗುತ್ತಿತ್ತು  ಅಲ್ಲದೇ ಸ್ವಾವಲಂಬನೆಯನ್ನೂ ಸಾಧಿಸಿದಂತಾಗುತ್ತಿತ್ತು.  ಸಾಕಷ್ಟು ದೂರ ದರ್ಶಿತ್ವವುಳ್ಳ ಗಾಂಧೀಜಿ ಮೂಲ ಶಿಕ್ಷಣದ ಪರಿಕಲ್ಪನೆಯನ್ನು ಹೊಂದಿದ್ದರು.೭ ರಿಂದ ೧೪ ವರ್ಷದೊಳಗಿನ ಎಲ್ಲ ಮಕ್ಕಳಿಗೂ ಮಾತೃ ಭಾಷೆಯಲ್ಲಿ ಶಿಕ್ಷಣ ನೀಡುವುದು ಇದರ ಉದ್ದೇಶವಾಗಿತ್ತು.ಇದರಿಂದ ಬಾಲ ಕಾರ್ಮಿಕ ಪದ್ದತಿ ಸ್ವಾಭಾವಿಕವಾಗಿಯೇ ಕಡಿಮೆಯಾಗುವುದೆಂಬ ಧೋರಣೆ ಇತ್ತು.  ಅಲ್ಲದೇ ಇಂದು ನಾವು ನೀಡುವ ಶಿಕ್ಷಣ  ನೈತಿಕತೆಯ ಅಡಿಪಾಯದ ಮೇಲೆ ಸಚ್ಚಾರಿತ್ರ್ಯವನ್ನು ಬೆಳೆಸಿದಾಗ ಮಾತ್ರ ಗಾಂಧೀಜಿಯವರ ಸಮಗ್ರ ಶಿಕ್ಷಣದ ಕನಸು ನನಸಾದೀತು. ನೈರ್ಮಲ್ಯ: ಗಾಂಧೀಜಿಯವರು ಆಂತರಿಕ ಹಾಗೂ ಬಾಹ್ಯ ನೈರ್ಮಲ್ಯಕ್ಕೆ ಹೆಚ್ಚಿನ ಒತ್ತು ನೀಡಿದ್ದರು.ದಕ್ಷಿಣ ಆಫ್ರಿಕಾದಲ್ಲಿರುವಾಗ ಅಲ್ಲಿನ ಭಾರತೀಯರಿಗೆ  ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದ್ದರು ನಂತರ ಭಾರತದಲ್ಲಿ  ಕೊಳೆಗೇರಿಗಳನ್ನು ತಾವೇ ಸ್ವತಃ ಸ್ವಚ್ಛ ಗೊಳಿಸಿದರು.ಆದರೆ ಬಾಪೂಜಿ ಹಾಕಿಕೊಟ್ಟ ನೈರ್ಮಲ್ಯೀಕರಣದ ಕನಸು ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಬೇಕಾದರೆ, ಜನರಲ್ಲಿ ಸ್ವಚ್ಛತೆಯ ಬಗ್ಗೆ ಆರೋಗ್ಯದ ಬಗ್ಗೆ ಕಾಳಜಿ ಬರಬೇಕು.ಎಲ್ಲೆಂದರಲ್ಲಿ ಉಗುಳುವ, ಪರಿಪಾಠ ನಿಲ್ಲಬೇಕು.ಪ್ಲಾಸ್ಟಿಕ್ ನ್ನು ಎಸೆಯುವ,  ತೇಲಿಬಿಡುವ, ಸುಡುವ ಪ್ರಕ್ರಿಯೆ  ನಿಲ್ಲಬೇಕು.ಇಂದಿನ ಸ್ವಚ್ಛ ಭಾರತ್ ಮಿಷನ್ ನ ಉದ್ದೇಶಗಳಾದ ಬಯಲು ಶೌಚ ನಿರ್ಮೂಲನೆ, ಸಾರ್ವಜನಿಕರಲ್ಲಿ ನೈರ್ಮಲ್ಯಕ್ಕಾಗಿ ಮಾನಸಿಕ ಬದಲಾವಣೆ ಕೊಳೆಗೇರಿಗಳ ಸಂಪೂರ್ಣ ನಿರ್ಮೂಲನೆ, ಸಾಮಾಜಿಕ ಸ್ವಾಸ್ತ್ಯದ ಕುರಿತು ಜನಜಾಗೃತಿ ಇವೆಲ್ಲ ಗಾಂಧೀಜಿ ಅಂದು ಹಾಕಿಕೊಟ್ಟ ಅಡಿಪಾಯಗಳು. ಅದನ್ನು ನೆಲೆಗೊಳಿಸಬೇಕಾದ ಜವಾಬ್ಧಾರಿ ನಮ್ಮ ಮೇಲಿದೆ. ನೈರ್ಮಲ್ಯದ ವಿಷಯದಲ್ಲಿ ಕೊರೊನಾ ನಮಗೆ ಪಾಠವನ್ನು ಕಲಿಸುತ್ತಿದೆ .ಗಾಂಧೀಜಿಯವರ ನೈರ್ಮಲ್ಯೀಕರಣ ಅಂದಿಗಿಂತ ಇಂದು ಹೆಚ್ಚು ಪ್ರಸ್ತುತವಾಗಿವೆ.ವೈಯ್ಯಕ್ತಿಕ ಸ್ವಚ್ಛತೆಯ ಜೊತೆಗೆ ಸಾಮಾಜಿಕ ಸ್ವಚ್ಛತೆಯ ಕಲ್ಪನೆ ಈಗ ಜನರಲ್ಲಿ ಮೂಡಬೇಕಾದ ಅವಶ್ಯಕತೆಯಿದೆ. ಹೀಗೆ ಗಾಂಧೀಜಿಯವರು ನುಡಿದಂತೆ ನಡೆದರು, ನಡೆಯಲ್ಲಿಯೇ ನುಡಿಯನ್ನು ಪ್ರತ್ಯಕ್ಷವಾಗಿ ತೋರಿಸಿದರು. ಅವರ ಚಿಂತನೆಗಳು , ಅಹಿಂಸೆ , ಸತ್ಯಗಳು, ಸಹಕಾರ ಮನೋಧರ್ಮ, ಸರಳತೆ, ಧರ್ಮಸಹಿಷ್ಣುತೆ, ಸ್ವಚ್ಛತೆ ,ಸ್ವಾವಲಂಬನೆ ಮೂಲಶಿಕ್ಷಣ ಇವೆಲ್ಲ ಈಗ ಹೆಚ್ಚು ಪ್ರಸ್ತುತವಾಗಿವೆ.ಕೊರೊನಾದಂತಹ ಈ ಸಾಂಕ್ರಾಮಿಕ ಪಿಡುಗಿನ ಈ ಕಠಿಣ ಪರಿಸ್ಥಿತಿಯಲ್ಲಿ ಗಾಂಧೀಜಿಯವರ ಒಂದೊಂದು ಚಿಂತನೆಯೂ ಅತ್ಯಮೂಲ್ಯವಾಗಿವೆ.ಅವರ ಚಿಂತನೆಗಳು ಎಂದಿಗೂ ಪ್ರಸ್ತುತ. ***************************** . ಶುಭಲಕ್ಷ್ಮಿ ಆರ್ ನಾಯಕ

ಮಹಾತ್ಮಾಗಾಂಧೀಜಿಯವರ ಚಿಂತನೆಗಳ ಪ್ರಸ್ತುತತೆ : Read Post »

ಕಾವ್ಯಯಾನ

ಮನಿಷಾ

ಕವಿತೆ ಮನಿಷಾ ವೀಣಾ ನಿರಂಜನ್ ಮೊದಲೇ ಕುರುಡಿಯಾಗಿದ್ದನ್ಯಾಯ ದೇವತೆಯಮೂಗಿಯನ್ನಾಗಿಸಿದರು ಮಗಳೇನಿನ್ನ ನಾಲಿಗೆ ಕತ್ತರಿಸಿಅವರ ಗಂಡಸುತನಕ್ಕೆ ಧಿಕ್ಕಾರವಿರಲಿ ಅವರ ಬೆಚ್ಚನೆಯ ಮನೆಗಳಲ್ಲಿಬಚ್ಚಿಟ್ಟ ನಿಧಿಯಂತೆ ನೀನೂ ಕೂಡಅರಿತಿದ್ದರೆ ಸಾಕಿತ್ತು ಅವರುಹತ್ತೂ ಕಡೆ ಚಾಚಿದ ವಿಷ ಸರ್ಪಗಳಹೆಡೆ ಮುರಿದು ಕಟ್ಟುತ್ತಿದ್ದರು ಅರಿಯದಾದರೆ ಅವರುನಿನ್ನೊಳಗಿನ ಕುಡಿಯನ್ನುಹೊರಲಾರದಷ್ಟು ಪಾಪದಮೂಟೆ ಹೊತ್ತು ನಡೆದರುಸಾವೂ ಕೂಡ ಸಹಜವಾಗಿಸುಳಿಯಲಾರದಿನ್ನು ಅವರ ಬಳಿ ಇಲ್ಲಿ ವಿಲ ವಿಲ ಒದ್ದಾಡುತ್ತಿದ್ದಾಳೆನ್ಯಾಯ ದೇವತೆನಿನ್ನ ನೆತ್ತರ ಬಿಸಿಯ ಸೋಕಿಉರಿಯುತ್ತಿದ್ದಾಳೆ ನಖಶಿಖಾಂತಸತ್ಯದ ನಾಲಿಗೆಯು ನೇತಾಡುತ್ತಿದೆನಿನ್ನ ನಾಲಿಗೆಯ ಹಾಗೇ ತೀರ್ಪು ಏನಾದರೇನು ಮಗಳೇನಿನ್ನ ಜೀವಕ್ಕೆ ಬೆಲೆ ಕಟ್ಟಲಾದಿತೇಬೇಡ ಮಗಳೇನಿನ್ನ ಪಾಡು, ನಿನ್ನ ನೋವು ಮುಂದೆಂದೂಬಾರದಿರಲಿ ನಿನ್ನಕ್ಕ ತಂಗಿಯರ ಪಾಲಿಗೆ ಎಲ್ಲರೊಳಗಿನ ತಾಯಿ, ತಂಗಿ, ಅಕ್ಕ, ಮಗಳುಪ್ರಜ್ವಲಿಸುತಿರಲಿ ಸದಾಅವರ ಎದೆಯೊಳಗೊಂದು ಸೂಜಿಇರಿಯುತಿರಲಿ ಮೊನಚಾಗಿಕಳಚಿ ಬೀಳಲಿ ಪಾಪದ ಕೊಂಡಿಹರೇ ರಾಮ್ ಹರೇ ರಾಮ್ ******************************                

ಮನಿಷಾ Read Post »

ಕಾವ್ಯಯಾನ

ಹೊತ್ತು ಬಂದಿದೆ

ಕವಿತೆ ಹೊತ್ತು ಬಂದಿದೆ ಗಾಂಧಿ ನೀನುದಿಸಿದನಾಡಿನಲೀ… ತೊನೆವ ತರುಗಳಕತ್ತು ಹಿಚುಕಿಜಲದ ಕಣ್ಣಿಗಿರಿವ ಹೊತ್ತು ಬಂದಿದೆ ಹರಿವರಿವ ನದಿಯದಿಕ್ಕು ದಿವಾಳಿಯಾಗಿಸಿಬರಿದಾಗಿಸುವ ಹೊತ್ತು ಬಂದಿದೆ ಖಗ ಮೃಗ ಹುಳ ಹುಪ್ಪಟೆಗಳನ್ನು ಬಿಡದೇ ಹುರಿದುರಿದು ಮುಕ್ಕುವ ಹೊತ್ತು ಬಂದಿದೆ ಸಾವಿರಾರು ವರುಷಗಳ ತಪೋನಿರತ ಶಿಲಾತಪಸಿಗಳಎದೆಗೆ ಮದ್ದಿಕ್ಕುವ ಹೊತ್ತು ಬಂದಿದೆ ಕಿವಿಗಡಚಿಕ್ಕುವಬೈರಿಗೆಗಳನ್ನಿಕ್ಕಿನೆಲದೊಡಲ ರಕ್ತ ಬಸಿವ ಹೊತ್ತು ಬಂದಿದೆ ಹೊತ್ತಿಗೊತ್ತಿಗೆ ಉರಿವ ದಿನಕರನ ಸಖ ಓಜೋನನ ಛಿದ್ರವಾಗಿಸುವ ಹೊತ್ತು ಬಂದಿದೆ ಚಂದಿರನ ಅಂಗಳದಲ್ಲಿಳಿವಮಂಗಳನ ಕೇರಿಯಲ್ಲಿಸುತ್ತುವ ಹೊತ್ತು ಬಂದರೂ… ವಿಜ್ಞಾನ ಜ್ಞಾನವೋ,ಅಜ್ಞಾನವೋ ಮಂಕುಗವಿದ ಬುದ್ದಿಗೆ ಲದ್ದಿ ಮೇಯುವ ಹೊತ್ತು ಬಂದಿದೆ ನಿನ್ನ ಮೂರು ಮಂಗಗಳು ಖಾದಿ ವೇಷತೊಟ್ಟುಅಧಿಕಾರದ ದರ್ಪದಲ್ಲಿದಿಮಿ ದಿಮಿ ಕುಣಿದುಮಾನವೀಯತೆಯನ್ನುನುಂಗಿ ನೊಣೆಯುವ ಹೊತ್ತ್ತು ಬಂದಿದೆ ಮಂದಿರವಿತ್ತೆಂಬ ಸಾಕ್ಷ್ಯ ಹುಡುಕಿದವರಿಗೆಗುಮ್ಮಟ ಉರುಳಿಸಿದವರ ನಿರ್ದೋಷದ ಹುಸಿನಗೆಯು ಕಾಣದಹೊತ್ತು ಬಂದಿದೆ ಬಾಪೂಜಿ ನೀ ಕೊನೆಯುಸಿರೆಳೆಯುವಾಗಹೇ ರಾಮ್ ಎಂದು ಉಸಿರು ಚೆಲ್ಲಿದೆಯೋ ನಾ ಕಾಣೆಇದೀಗಅಯ್ಯೋ ರಾಮ ಎಂದೆನುತ ಗೋರಿಯಲ್ಲಿ ನಿಡುಸುಯುವಹೊತ್ತಂತು ಬಂದಿದೆ…ಬಂದೇ ಇದೆ.. *****************************

ಹೊತ್ತು ಬಂದಿದೆ Read Post »

ಕಾವ್ಯಯಾನ

ಫಿವಟ್ ಕವಿತೆ…

ಕವಿತೆ ಫಿವಟ್ ಕವಿತೆ…. ಹುಳಿಯಾರ್ ಷಬ್ಬೀರ್ 01 ಬರೆಯಲೆಂದುಕುಳಿತಾಗಅವಳನ್ನು ಬರೆದೆನನ್ನನ್ನು ನಾನೇಮರೆತೆ….! 02 ಕಣ್ಣಲ್ಲಿ ಕದ್ದುಮನಸ್ಸಲ್ಲಿಇಳಿಯುವ ಮುನ್ನಗಂಟಲಿಗೆಇಳಿಸಿದ್ದೆನೀ ಕೊಟ್ಟದೊಡ್ಡ ವರ…! 03 ಗುಂಡು ಅವಳುಇಬ್ಬರೂ ನಶೆಯೇಗುಂಡು ತಾತ್ಕಾಲಿಕ ನಶೆಅವಳು ನಶೆಯಪರಾಕಾಷ್ಠೆ….! 04 ಮನಸ್ಸಿಗೆನೈವೇದ್ಯ ಎಣ್ಣೆಯಲ್ಲಿಆಗಬೇಕಂತೆನೋವುನಿರಾಳವಾಗಲುಲೋಟ ಚಿಯರ್ಸ್ಎನ್ನಲು…! 05 ಕುಡಿದಷ್ಟುಮಾತು ಜಾಸ್ತಿ ಆಯಿತುಪದೇ ಪದೇಅವಳ ನೆನಪುಆಯಿತು…! **************************

ಫಿವಟ್ ಕವಿತೆ… Read Post »

You cannot copy content of this page

Scroll to Top