ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ಮುಖಾಮುಖಿ

ಅಂಕಣ ಬರಹ ಕತೆಗಾರ್ತಿ ಆಶಾ ಜಗದೀಶ್ಮುಖಾಮುಖಿಯಲ್ಲಿ “ಹೆಣ್ಣು ನನ್ನ ಬರಹದ ಮೂಲ ಕಾಳಜಿ” ಕವಿತೆಗಳನ್ನು ಯಾಕೆ ಬರೆಯುತ್ತೀರಿ ? ಉತ್ತರ: ಕವಿತೆಯನ್ನು ನಾನು ಬರೆಯುತ್ತೇನೆ ಎನ್ನುವುದು ತಪ್ಪಾಗುತ್ತದೆ. ಕವಿತೆಗಳೇ ನನ್ನಿಂದ ಬರೆಸಿಕೊಳ್ಳುತ್ತವೆ ಎನ್ನುವುದು ಸರಿ. ನನ್ನೊಳಗೆ ಅಂತಹುದೊಂದು ತೀವ್ರತೆಯನ್ನು ಇಟ್ಟುಕೊಳ್ಳದೆ ಬರೆಯುವುದು ನನಗೆ ಕಷ್ಟ. ಕವಿತೆ ಹುಟ್ಟುವ ಕ್ಷಣ ಯಾವುದು ? ಉತ್ತರ: ಯಾವ ಕ್ಷಣವಾದರೂ ಸರಿ ಅದು ನನ್ನನ್ನು ಕಾಡಬೇಕು. ಸತಾಯಿಸಬೇಕು. ಇನ್ನು ಬರೆಯದೆ ಉಳಿಯಲಾರೆ ಅನ್ನಿಸುವಂತೆ ಮಾಡಬೇಕು. ಆಗ ಮಾತ್ರ ಕವಿತೆ ಹುಟ್ಟುತ್ತದೆ. ಹಾಗಾಗಿ ಕವಿತೆಯ ರಚನೆಯಲ್ಲಿ ನಿರಂತರತೆಯನ್ನು ಕಾಪಾಡಿಕೊಳ್ಳುವುದು ಕಷ್ಟಸಾಧ್ಯ. ನಿಮ್ಮ ಕವಿತೆಗಳ ವಸ್ತು, ವ್ಯಾಪ್ತಿ ಹೆಚ್ಚಾಗಿ ಯಾವುದು ? ಪದೇ ಪದೇ ಕಾಡುವ ವಿಷಯ ಯಾವುದು ? ಉತ್ತರ: ವಸ್ತು ಇಂಥದ್ದೇ ಇರಬೇಕು ಅಂತೇನೂ ಇಲ್ಲ ನನಗೆ. ಸುತ್ತಲಿನ ಆಗುಹೋಗುಗಳೆಲ್ಲಕ್ಕೂ ಸೂಕ್ಷ್ಮವಾಗಿ ಸ್ಪಂದಿಸುವವಳು ನಾನು. ಯಾರದೋ ಸಾವು ಮತ್ಯಾರದೋ ಕಷ್ಟ ಎಲ್ಲವೂ ನನ್ನನ್ನು ಅಳಿಸುತ್ತವೆ. ಒಂದು ಆರ್ಟ್ ಮೂವಿ ಚಾಲು ಆಯಿತೆಂದರೆ ನನ್ನ ಕಣ್ಣೀರು ಕೋಡಿ ಬೀಳುವುದು ಗ್ಯಾರೆಂಟಿ ಎಂದು ಮೊದಲೇ ಹೇಳಿಬಿಡಬಹುದು. ಮತ್ತೆ ಅದರ ಬಗ್ಗೆ ನನಗೆ ಮುಜುಗರವಿಲ್ಲ. ಇನ್ಫ್ಯಾಕ್ಟ್ ಎಷ್ಟೋ ಹೊತ್ತು ಅಥವಾ ಕೆಲ ದಿನಗಳೂ ಅದೇ ಹ್ಯಾಂಗೋವರಿನಲ್ಲಿ ಇರಲು ಬಯಸ್ತೇನೆ ನಾನು. ಆಗ ನನ್ನಲ್ಲಿ ಕವಿತೆಯೊಂದು ಮೊಳಕೆಯೊಡೆಯಬಹುದು. ನೋವು, ಸಂತೋಷ, ಸಿಟ್ಟು, ಅಸಹನೆ, ಕೋಪ….. ಇತ್ಯಾದಿ ಯಾವ ಭಾವವೇ ಆಗಿರಲಿ ಅದರ ಶಿಖರ ಮುಟ್ಟುವ ತೀವ್ರತೆ ನನ್ನನ್ನಾವರಿಸಿದಾಗ ನನ್ನೊಳಗೆ ಕವಿತೆ ಮೊಟ್ಟೆ ಇಡುತ್ತದೆ. ಮತ್ತೆ ಕವಿಯಾದವನು ಅಂತರಂಗದ ದನಿಯಾಗುತ್ತಲೇ ಬಹಿರಂಗದ ಕಿವಿಯಾಗಲೂ ಬೇಕಿರುತ್ತದೆ. ಹಾಗಾಗಿ ಅವನ ಕಾವ್ಯ ಅದೆರಡರಿಂದಲೂ ಪ್ರಭಾವಿಸಲ್ಪಟ್ಟಿರುತ್ತದೆ. ಅದಕ್ಕೆ ನಾನೂ ಹೊರತಲ್ಲ. ಹೆಣ್ಣು ನನ್ನ ಬರಹದ ಮೂಲ ಕಾಳಜಿ ಕಾರಣ ಹೆಣ್ಣು ಹೊರಗಿನಿಂದಷ್ಟೇ ಅಲ್ಲ ಒಳಗಿನಿಂದಲೂ ಹೆಚ್ಚು ಗೊತ್ತಿರುವ ಕಾರಣ ಇರಬಹುದು. ಕವಿತೆಗಳಲ್ಲಿ ಬಾಲ್ಯ, ಹರೆಯ ಇಣುಕಿದೆಯೇ ? ಉತ್ತರ: ಖಂಡಿತಾ. ಬಾಲ್ಯದ ನೆನಪುಗಳಿಲ್ಲದೇ ನಮ್ಮ ಯಾವ ಪ್ರಕಾರದ ಬರಹವೂ ಸಂಪೂರ್ಣವಾಗಲಿಕ್ಕೇ ಸಾಧ್ಯವಿಲ್ಲ ಎನಿಸುವಷ್ಟು ಅದು ನಮ್ಮ ಬರಹಗಳಲ್ಲಿ ಹಾಸು ಹೊಕ್ಕು. ಇನ್ನು ಹರೆಯ ಎನ್ನುವುದು ಕಲ್ಲನ್ನೂ ಕವಿಯನ್ನಾಗಿಸಿಬಿಡುವ ಕಾಲ. ಅದಕ್ಕೆ ಯಾರೂ ಹೊರತಾಗಲು ಸಾಧ್ಯವಿಲ್ಲ. ಇದೇ ಹಂತದಲ್ಲಿಯೇ ನಮ್ಮ ದೇಹ ಮತ್ತೊಂದು ಹಂತದ ಬೇಳವಣಿಗೆಯನ್ನು ಪಡೆದುಕೊಳ್ಳುತ್ತದೆ. ಹಾರ್ಮೋನುಗಳ ವ್ಯತ್ಯಯ ವೈಪರಿತ್ಯ ನಮ್ಮ ಭಾವಕೋಶವನ್ನು ನಾನಾಥರದ ಪರೀಕ್ಷೆಗೆ ಒಳಗಾಗುವಂತೆ ಮಾಡುತ್ತದೆ. ಇವೆಲ್ಲವೂ ಒಂದಿಡೀ ಬದುಕಿಗೆ ಅಗತ್ಯವಿರುವ ಅನುಭವಗಳು. ನಾವವನ್ನು ಅಗತ್ಯವಾಗಿ ಕಟ್ಟಿಟ್ಟುಕೊಳ್ಳಲೇ ಬೇಕು. ಅದು ಪ್ರೇಮ ಮತ್ತು ಕಾಮದ ಭಾವಗಳು ಬಲಗೊಳ್ಳುವ ಕಾಲವೂ ಹೌದು. ಪ್ರೇಮ ಮತ್ತು ಕಾಮ ನಮ್ಮನ್ನು ಅತ್ಯಂತ ತೀವ್ರವಾಗಿ ತಲ್ಲಣಿಸುವಂತೆ ಕಾಡಬಲ್ಲ ಭಾವಗಳು. ಕವಿಯಾದವನಿಗೆ ಅವು ವರದಾನವೇ ಸರಿ. ಮತ್ತೆ ಪ್ರತಿಯೊಬ್ಬರೂ ಅವಕ್ಕೆ ಈಡಾಗದೇ ಪಾರಾಗುವುದು ಸಾಧ್ಯವಿಲ್ಲ. ಪ್ರಸ್ತುತ ರಾಜಕೀಯ ಸನ್ನಿವೇಶದ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು ? ಉತ್ತರ : ಹಿಂದಿನಿಂದಲೂ ರಾಜಕೀಯದ ಅಂಗಳದಲ್ಲಿಯೇ ಸಾಹಿತ್ಯ ಪೋಷಣೆ ಪಡೆದು ಬೆಳೆದು ಬಂದಿರುವುದನ್ನು ಕಾಣಬಹುದು. ರಾಜಾಶ್ರಯವಿಲ್ಲದೇ ಕವಿಗಳು ಕಾವ್ಯವನ್ನಷ್ಟೇ ನಂಬಿ ಬದುಕುವ ಸ್ಥಿತಿ ಆಗ ಇರುತ್ತಿರಲಿಲ್ಲ. ಅದರ ನಡುವೆಯೂ ಯಾವ ಆರ್ಥಿಕ ಸಹಾಯವಿಲ್ಲದೆಯೂ ಬರೆದ ಕೆಲವರು ಸಿಗುತ್ತಾರೆ. ಆದರೆ ತಮ್ಮ ಜೀವಿತಾವಧಿಯಲ್ಲಿ ಅವರಿಗೆ ಸಿಗಬೇಕಾದ ಮಾನ ಮನ್ನಣೆ ಸಿಗದೆ ಹೋಗಿರುವುದು ಕಂಡುಬರುತ್ತದೆ. ಇದು ರಾಜಾಶ್ರಯದ ಬೆಂಬಲವಿಲ್ಲದ್ದು ಕಾರಣ ಎನ್ನುವುದೂ ತಿಳಿದುಬರುತ್ತದೆ. ಆದರೆ ಈಗ ಹಾಗಿಲ್ಲ. ಬಹಳಷ್ಟು ಬರಹಗಾರರು ಆರ್ಥಿಕವಾಗಿ ಸ್ವತಂತ್ರರಿದ್ದಾರೆ ಮತ್ತು ಮುಖ್ಯವಾಗಿ ಬರಹವನ್ನೇ ನಂಬಿ ಬದುಕುತ್ತಿಲ್ಲ. ಇದು ಒಂದು ರೀತಿಯಲ್ಲಿ ಒಳ್ಳೆಯದೇ ಆಗಿದೆ. ಇಲ್ಲಿ ಸಾಹಿತ್ಯವನ್ನು ಪ್ರೀತಿಯಿಂದ ಓದುವ ಮತ್ತು ಬರೆಯುವ ಕಾರಣಕ್ಕಾಗಿ ಸಾಹಿತ್ಯವನ್ನು ಆಯ್ಕೆ ಮಾಡಿಕೊಳ್ಳುವುದು ಸಾಧ್ಯವಾಗಿದೆ. ಈಗ ಆಮಿಷಗಳಿಲ್ಲ, ಹೊಗಳು ಭಟ್ಟಂಗಿಗಳಾಗುವ ಅವಶ್ಯಕತೆ ಅಥವಾ ಅನಿವಾರ್ಯತೆ ಯಾರಿಗೂ ಇಲ್ಲ. ಆದರೆ ಇಂದಿನ ರಾಜಕೀಯ ಪ್ರಭಾವವೇ ಬೇರೆ. ಮತ್ತದು ಸಾಹಿತ್ಯದ ಮಟ್ಟಿಗೆ ಪೂರಕವಾಗಿದೆ ಅಂತನ್ನಿಸುವುದಿಲ್ಲ ನನಗೆ. ಧರ್ಮ ,ದೇವರು ವಿಷಯದಲ್ಲಿ ನಿಮ್ಮ ನಿಲುವೇನು ? ಉತ್ತರ : ಧರ್ಮ ನಮ್ಮನ್ನು ಸರಿಯಾದ ದಾರಿಯಲ್ಲಿ ನಡೆಸುವ ಮಾರ್ಗ. ದೇವರು ಎಂದರೆ ನಾವು ತಪ್ಪು ಮಾಡದಂತೆ ಸದಾ ನಮ್ಮನ್ನು ಎಚ್ಚರಿಸುವ ಅರಿವು. ಇದು ನನ್ನ ಸರಳ ನಂಬಿಕೆ. ದೇವರನ್ನು ನಾನು ನಂಬುವುದು ಹೀಗೆ. ತೋರಿಕೆಗೆ ದೇವರ ಮುಂದೆ ಕೂತು ಭಜನೆ ಮಾಡುವುದು ನನ್ನಿಂದ ಸಾಧ್ಯವಿಲ್ಲ. ಹಸಿದವನನ್ನ “ಮುಂದೆ ಹೋಗು…” ಎಂದು ಹೇಳಿ ದೇವರ ಮುಂದೆ ನೈವೇದ್ಯಕ್ಕಿಡುವುದು ನನ್ನಿಂದಾಗದ ಕೆಲಸ. ಮನಸ್ಸು ಶುದ್ಧಾವಗಲ್ಲದೆ ಸ್ನಾನ ಮಾಡಿರುವೆ ಎನ್ನುವ ಕಾರಣಕ್ಕೆ ದೇವರ ಎದುರು ಕೂರುವುದು ನನ್ನಿಂದ ಸಾಧ್ಯವಿಲ್ಲ. ದೇವರ ಭಾವಚಿತ್ರವೇ ಒಂದು ಅಗ್ನಿದಿವ್ಯವಿದ್ದಂತೆ. ಅದರ ಕಣ್ಣಿಗೆ ಕಣ್ಣು ಸೇರಿಸಲು ನಿಜಾಯಿತಿ, ಪ್ರಾಮಾಣಿಕತೆ ಮತ್ತು ಆತ್ಮಸಾಕ್ಷಿಗೆ ನಿಯತ್ತಾಗಿರಬೇಕು. ಹಾಗಿಲ್ಲದೇ ಹೋಗಿ ಕೂತು ಕಣ್ಣುತಪ್ಪಿಸಿ ಕೂತು ಎದ್ದುಬರುವುದು ನನಗಂತೂ ಕಷ್ಟ. ನಾನು ಆಸ್ತಿಕಳು. ಆದರೆ ನನ್ನನ್ನು ಹತ್ತಿರದಿಂದ ನೋಡುವವರು ನಾಸ್ತಿಕಳೆಂದು ತಿಳಿಯಬಹುದು. ಕಾರಣ ಅವರ ನಂಬಿಕೆಗೂ ನನ್ನ ನಂಬಿಕೆಗೂ ಸಾಕಷ್ಟು ವ್ಯತ್ಯಾಸವಿದೆ. ನನ್ನ ದೇವರಿಗೊಂದು ಹೆಸರಿರಬೇಕು ಎಂದು ನಾನು ಬಯಸುವುದಿಲ್ಲ. ನನ್ನ ದೇವರಿಗೆ ಜಾತಿ, ಧರ್ಮದ ಹಂಗಿಲ್ಲ. ಅದೊಂದು ಶಕ್ತಿ, ಅದೊಂದು ಬೆಳಕು… ಹಚ್ಚಿಟ್ಟ ದೀಪದ ಜ್ಯೋತಿಯೇ ದೇವರು. ಪ್ರಸ್ತುತ ಸಾಂಸ್ಕೃತಿಕ ವಾತಾವರಣದ ಬಗ್ಗೆ ನಿಮಗೆ ಏನನ್ನಿಸುತ್ತಿದೆ ? ಉತ್ತರ: ಇವತ್ತಿನ ಸಾಂಸ್ಕೃತಿಕ ಪ್ರಪಂಚ ಜಾಗತಿಕ ಮಟ್ಟದಲ್ಲಿ ವೈವೀಧ್ಯಮಯ ಅವಕಾಶಗಳನ್ನು ನಮಗೆ ಮಾಡಿಕೊಡುತ್ತಿದೆ. ಇವತ್ತು ಬರಹಗಾರನಿಗೆ ಸಾಕಷ್ಟು ಸ್ಪೂರ್ತಿ ಇದೆ ಬರೆಯಲಿಕ್ಕೆ. ಯಾವುದೇ ಒತ್ತಡವಿಲ್ಲ. ಆದರೆ ಆಧುನಿಕತೆಯ ವೇಗ ಅವನಲ್ಲಿ ವಿಚಿತ್ರ ಧಾವಂತವನ್ನು ಸೃಷ್ಟಿಸುತ್ತಿದೆ. ಎಲ್ಲವೂ ಇನ್ಸ್ಟಂಟ್ ಆಗುತ್ತಿರುವ ಈ ಹೊತ್ತಿನಲ್ಲಿ ಇನ್ಸ್ಟಂಟ್ ಹೆಸರು, ಪ್ರಸಿದ್ಧಿ, ಗುರುತಿಗಾಗಿ ಅರೆಬೆಂದ ಪದಾರ್ಥವನ್ನು ಬಡಿಸುವ ತರಾತುರಿಯೂ ಬೆಳೆಯುತ್ತಿದೆ. ಸ್ವಾರ್ಥ, ಅಸಹನೆ, ಮೇಲರಿಮೆ, ಕೀಳರಿಮೆ… ಮುಂತಾದ ಕಾರಣಕ್ಕೆ ತಮ್ಮ ಜಾಗಟೆಯನ್ನು ತಾವೇ ಹೊಡೆದುಕೊಳ್ಳುವುದು ಹೆಚ್ಚಾಗುತ್ತಿದೆ. ಅದರಿಂದ ಪಾರಾಗಿ ಬರೆಯಬೇಕಾಗಿರುವುದು ಸಧ್ಯದ ತುರ್ತು. ಸಾಹಿತ್ಯ ವಲಯದ ರಾಜಕಾರಣದ ಬಗ್ಗೆ ನೀವು ಹೇಗೆ ಪ್ರತಿಕ್ರಿಯಿಸುವಿರಿ? ಉತ್ತರ: ಸಾಂಸ್ಕೃತಿಕ ಕ್ಷೇತ್ರದ ಒಳಗಿನ ರಾಜಕಾರಣ ಭಯ ಹುಟ್ಟಿಸುತ್ತದೆ. ಅರಣ್ಯದ ಯಾವ ಮರವೂ ಒಂದನ್ನೊಂದು ತುಳಿದು ಬೆಳೆಯುವುದಿಲ್ಲ. ಅಲ್ಲಿ ಒಂದು ಸಣ್ಣ ಪೊದೆ ಹೇಗೆ ಸ್ವತಂತ್ರವಾಗಿ ಹಬ್ಬಿ ಬೆಳೆಯುತ್ತದೋ ಹಾಗೆಯೇ ತೇಗ, ಹೊನ್ನೆ, ದೇವದಾರುವಿನಂತಹ ಮರಗಳೂ ಬೆಳೆಯುತ್ತವೆ. ಅಲ್ಲಿನ ಪ್ರತಿಯೊಂದು ಪ್ರಾಣಿಯೂ ಸ್ವಾಭಾವಿಕ ಆಹಾರ ಸರಪಣಿಯನ್ನು ಅನುಸರಿಸಿ ತಮ್ಮ ಬದುಕನ್ನು ತಾವು ಸಾಗಿಸುತ್ತವೆ. ಹಾಗೆ ಬೆಳೆಯಬೇಕು ನಾವು. ಆದರೆ ಇಲ್ಲಿ ಹಾಗಾಗುವುದಿಲ್ಲ. ನಕಾರಾತ್ಮಕ ಬಾಹ್ಯ ಪ್ರೇರಣೆಗಳು, ಪ್ರಭಾವಗಳು ನಮ್ಮನ್ನು ಹಾದಿ ತಪ್ಪಿಸುತ್ತವೆ. ಅವುಗಳಿಂದ ಪಾರಾಗಿ ಬರಹವನ್ನು ಮಾಡಬೇಕಾದ ಸವಾಲು ನಮ್ಮ ಮುಂದಿದೆ. ಈ ದೇಶದ ಚಲನೆಯ ಬಗ್ಗೆ ನಿಮ್ಮ ಮನಸು ಏನು ಹೇಳುತ್ತಿದೆ? ಉತ್ತರ: ಸಧ್ಯದ ಕರೋನಾ ಪರಿಸ್ಥಿತಿಯಲ್ಲಿ ಯಾವುದನ್ನೂ ಅರ್ಥೈಸುವುದು, ನಿರ್ಧರಿಸುವುದು ಅಷ್ಟು ಸುಲಭವಿಲ್ಲ. ಆದರೂ ವಿಶ್ವದ ಮುಂದೆ ಭಾರತದ ಚಲನೆ ಆಶಾದಾಯಕವೆನಿಸುತ್ತಿದೆ. ಸಾಹಿತ್ಯದ ಬಗ್ಗೆ ನಿಮ್ಮ ಕನಸುಗಳೇನು ? ಉತ್ತರ: ಖಂಡಿತ ನನಗೆ ಕನಸುಗಳಿಲ್ಲ. ಬರೆಯುವುದು ನನ್ನ ಜರೂರತ್ತು. ಯಾರನ್ನೂ ಮೆಚ್ಚಿಸಲಿಕ್ಕಲ್ಲ. ಯಾರಾದರೂ ಹೊಗಳಿದರೆ ನನಗೆ ವಿಪರೀತ ಮುಜುಗರವಾಗುತ್ತದೆ. ಇನ್ನೊಂದೇ ಒಂದು ಮಾತನ್ನೂ ಕೇಳಿಸಿಕೊಳ್ಳಲು ಸಾಧ್ಯವಿಲ್ಲ ನನ್ನಿಂದ ಎನ್ನಿಸುವಷ್ಟು. ನಾನು ನನ್ನ ತುಡಿತ, ತುಮುಲ, ಒಳ ಒತ್ತಡವನ್ನ ತಡೆಯಲಾಗದೆ ಬರೆದದ್ದನ್ನು ಸೌಜನ್ಯದಿಂದ ಓದಿ ಪ್ರೀತಿಸುವವರ ಬಗ್ಗೆ ಅಪಾರ ಪ್ರೀತಿ ಮತ್ತು ಗೌರವವಿರುತ್ತದೆ. ಅವರು ನಿಜವಾಗಲೂ ಹೊಗಳಿಕೆಗೆ ಅರ್ಹರು. ಇನ್ನು ಇದುವರೆಗೂ ನಾನೇನು ಬರೆದಿರುವೆನೋ ಅದೆಲ್ಲ ನಾನು ಕನಸುಕಟ್ಟಿ ಬರೆದದ್ದಲ್ಲ. ಹಾಗಾಗಿ ಇನ್ನು ಮುಂದೆಯೂ ಅದು ಹಾಗೇ ನಡೆದುಕೊಂಡು ಹೋಗುತ್ತದೆ. ನನಗೆ ನಿರೀಕ್ಷೆಗಳು ಕಡಿಮೆ. ಹಾಗಾಗಿ ನೋವೂ ಕಡಿಮೆ. ಯಾರಾದರೂ ನ್ಯಾಯವಾಗಿ ಟೀಕಿಸಿದರೆ ಖುಷಿಯಾಗುತ್ತದೆ. ಮತ್ತು ಅನಗತ್ಯ ಟೀಕೆಗಳನ್ನು ತಳ್ಳಿಹಾಕಿ ಮುನ್ನಡೆಯುವುದೂ ಗೊತ್ತು. ನೆನ್ನೆ ನಾಳೆಗಳಿಗಿಂತ ವರ್ತಮಾನದಲ್ಲಿ ಬದುಕುವವಳು ನಾನು. ಈ ಕ್ಷಣ ನಾನೇನು ಮಾಡುತ್ತಿರುತ್ತೇನೋ ಅದನ್ನು ನೂರು ಪ್ರತಿಶತ ನನ್ನ ಸಾಮರ್ಥ್ಯ ಸುರಿದು ಚೊಕ್ಕವಾಗಿ ಮಾಡಿ ಮುಗಿಸಬೇಕು, ಅಷ್ಟೇ ನನ್ನ ಗುರಿಯಾಗಿರುತ್ತದೆ. ಕನ್ನಡ ಹಾಗೂ ಆಂಗ್ಲ ಭಾಷೆಯ ಸಾಹಿತ್ಯದಲ್ಲಿ ನಿಮ್ಮ ಇಷ್ಟದ ಹಾಗೂ ಕಾಡಿದ ಕವಿ, ಸಾಹಿತಿ ಯಾರು ? ಉತ್ತರ: ಒಬ್ಬರೇ ಅಂತ ಹೇಳುವುದು ಕಷ್ಟ. ಬಹಳಷ್ಟು ಮಂದಿ ಇದ್ದಾರೆ. ಓ.ಹೆನ್ರಿ, ಎಮಿಲಿ ಡಿಕಿನ್ಸನ್, ಶೇಕ್ಸ್‌ಪಿಯರ್, ವಿಲಿಯಮ್ ಬ್ಲೇಕ್, ಕೀಟ್ಸ್, ಮಾಯಾ ಏಂಜೆಲೋ… ಮುಂತಾದವರು. ಮತ್ತೆ ಭಾರತೀಯ ಇಂಗ್ಲೀಷ್ ಬರಹಗಾರರಲ್ಲಿ ಅರವಿಂದ್ ಅಡಿಗ, ಚೇತನ್ ಭಗತ್, ಕಮಲಾದಾಸ್, ಎ.ಕೆ.ರಾಮಾನುಜನ್, ರಸ್ಕಿನ್ ಬಾಂಡ್… ಮತ್ತು ಹೆಸರಿಸಲಾದಷ್ಟು ಮಂದಿ ಒಂದೇ ಒಂದು ಕವಿತೆ, ಒಂದೇ ಒಂದು ಕತೆ ಅಥವಾ ಒಂದೇ ಒಂದು ಬರಹವಾಗಿ ನನ್ನ ಓದಿಗೆ ದಕ್ಕಿ ನನ್ನ ಅರಿವನ್ನು ವಿಸ್ತರಿಸಿರುತ್ತಾರೆ. ಅವರೆಲ್ಲರೂ ನನಗೆ ಇಷ್ಟವೇ. ಮತ್ತೆ ಕನ್ನಡದಲ್ಲಿ ನನ್ನನ್ನು ಬಹಳ ಕಾಡಿದವರೆಂದರೆ ಕುವೆಂಪು ತೇಜಸ್ವಿ, ಅನಂತಮೂರ್ತಿ, ಕುಂ. ವೀರಭದ್ರಪ್ಪ, ಜಯಂತ್ ಕಾಯ್ಕಿಣಿ….. ಇವರೆಲ್ಲ ಈಗಲೂ ನನ್ನನ್ನು ಕಾಡುವವರೇ. ಇತ್ತೀಚೆಗೆ ಬರೆಯುತ್ತಿರುವ ಬಹಳಷ್ಟು ಮಂದಿ ಬರಹಗಾರರು ತಮ್ಮ ಗಟ್ಟಿ ಬರಹದಿಂದಾಗಿ ನನಗೆ ಬಹಳ ಇಷ್ಟ. ಈಚೆಗೆ ಓದಿದ ಕೃತಿಗಳಾವವು? ಉತ್ತರ: ಇತ್ತೀಚೆಗೆ ಆಲ್ಕೆಮಿಸ್ಟ್ (poulo coelho) ಓದಿದೆ. ಬಹಳ ಇಷ್ಟವಾಯ್ತು. ಈ ಕಾದಂಬರಿಯ ಮೊದಲಲ್ಲಿ ಒಂದು ಸಣ್ಣ ಕತೆ ಬರುತ್ತದೆ. ಅಲ್ಲೊಬ್ಬ ಸಣ್ಣ ವಯಸ್ಸಿನ ಹುಡುಗನಿರುತ್ತಾನೆ. ಅವನು ಬಹಳ ಸುಂದರವಾಗಿರುತ್ತಾನೆ. ಪ್ರತಿನಿತ್ಯ ಅವನೊಂದು ತಿಳಿಗೊಳಕ್ಕೆ ಬರುತ್ತಿರುತ್ತಾನೆ. ಅದರಲ್ಲಿ ತನ್ನ ಪ್ರತಿಬಿಂಬ ನೋಡಿಕೊಂಡು ಖುಷಿಪಡುತ್ತಿರುತ್ತಾನೆ. ಆದರೆ ಅದೊಂದು ದಿನ ಅವ ಅದೇ ಕೊಳದಲ್ಲಿ ಜಾರಿ ಬಿದ್ದು ಸತ್ತು ಹೋಗುತ್ತಾನೆ. ಕೊಳ ದುಃಖಿತವಾಗುತ್ತದೆ. ಅವನು ಬಿದ್ದ ಜಾಗದಲ್ಲಿ ಸುಂದರವಾದ ಕಮಲವೊಂದು ಹುಟ್ಟಿ ಅರಳುತ್ತದೆ. ಒಮ್ಮೆ ಅತ್ತ ಹೋಗುತ್ತಿದ್ದ ದೇವತೆಗಳು ಕೊಳವನ್ನು ಕೇಳುತ್ತಾರೆ, “ನಿನಗೀಗ ದುಃಖವಾಗುತ್ತಿರಬಹುದಲ್ಲವಾ, ಅವ ಅದೆಷ್ಟು ಸುಂದರವಾಗಿದ್ದ, ಪ್ರತಿನಿತ್ಯ ನಿನ್ನ ಸಮತಲದ ಮೇಲೆ ಬಹಳ ಹತ್ತಿರದಿಂದ ತನ್ನ ಮುಖದ ಪ್ರತಿಬಿಂಬವನ್ನು ನೋಡಿಕೊಂಡು ಆನಂದಿಸುತ್ತಿದ್ದ ” ಎಂದು ಕೇಳುತ್ತಾರೆ. ಆಗ ಕೊಳ “ಹುಡುಗ ಸುಂದರನಿದ್ದನಾ? ನಿಜಕ್ಕೂ ನನಗೆ ಗೊತ್ತಿಲ್ಲ. ಅವನು ಪ್ರತಿಬಾರಿ ಕಣ್ಣರಳಿಸಿ ಬಹಳ ಹತ್ತಿರದಿಂದ ನನ್ನನ್ನು ನೋಡುವಾಗ ನಾನು ಅವನ ಕಣ್ಣಲ್ಲಿ ನನ್ನದೇ ಸೌಂದರ್ಯವನ್ನು ಕಂಡು ಬೆರಗಾಗುತ್ತಿದ್ದೆ. ಈಗ ಅದು ಸಾಧ್ಯವಾಗುತ್ತಿಲ್ಲ, ಅದು ನನ್ನ ನೋವು” ಎನ್ನುತ್ತದೆ. ಈ ಕತೆ ಅದೆಷ್ಟು ನನ್ನನ್ನು ಕಾಡಿತೆಂದರೆ, ಹೌದಲ್ಲವಾ ನಾವು ಯಾವ ಮಟ್ಟಿಗೆ ತಯಾರಾಗಿದ್ದೇವೆ ಎಂದರೆ ನಮಗೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವುದನ್ನು ಬಿಟ್ಟು ಬೇರೆ ಏನೂ ಗೊತ್ತಿಲ್ಲ. ಬೇಕಾಗೂ ಇಲ್ಲ. ನಿಮಗೆ ಇಷ್ಟವಾದ ಕೆಲಸ ಯಾವುದು? ಉತ್ತರ: ಹಾಡುವುದು, ಬಣ್ಣಗಳ ಜೊತೆ ಆಟ ಆಡುವುದು, ಚಿತ್ರ ಬರೆಯುವುದು, ಕ್ರಾಫ್ಟ್ ಮಾಡುವುದು, ಸುಮ್ಮನೆ ಗೊತ್ತು ಗುರಿ ಇಲ್ಲದೇ ಓದುತ್ತಾ ಕೂರುವುದು, ಮಕ್ಕಳೊಂದಿಗೆ ಬೆರೆಯುವುದು, ಅವರಿಗೆ ಏನಾದರೂ ಕಲಿಸುವುದು, ಅವರಲ್ಲಿ ಸ್ಪೂರ್ತಿ ತುಂಬುವುದು…. ಹೀಗೆ ಒಟ್ಟಿನಲ್ಲಿ ಸುಮ್ಮನೆ ಕೂರಲಿಕ್ಕಂತೂ ನನಗೆ ಸಾಧ್ಯವಿಲ್ಲ. ಏನಾದರೂ ಸರಿ ಮಾಡುತ್ತಲೇ ಇರಬೇಕು ನಾನು. ಜೊತೆಗೆ ಕೌಟುಂಬಿಕ ಜವಾಬ್ದಾರಿಗಳಂತೂ ಇದ್ದೇ ಇರುತ್ತವೆ. ನಿಮಗೆ ಇಷ್ಟವಾದ ಸ್ಥಳ ಯಾವುದು ? ಉತ್ತರ: ಸಮುದ್ರ ತೀರ ಮತ್ತು ದಟ್ಟ ಕಾಡು. ನಾನು ಹುಟ್ಟಿ ಬೆಳೆದದ್ದು ಮಲೆನಾಡಿನಲ್ಲಿ. ಚಿಕ್ಕಂದಿನ ಟ್ರಿಪ್ಪುಗಳಲ್ಲಿ ಬಹಳಷ್ಟು

Read Post »

ಇತರೆ, ವರ್ತಮಾನ

ಬರಗೂರರೆಂಬ ಬೆರಗು

ಲೇಖನ ಬರಗೂರರೆಂಬ ಬೆರಗು ಮಮತಾ ಅರಸೀಕೆರೆ ಪ್ರೊ.ಬರಗೂರು ರಾಮಚಂದ್ರಪ್ಪನವರ ಬಗ್ಗೆ ಬರೆಯುವುದೆಂದರೆ ಸಾಗರಕ್ಕೆ ಸೇರುವ ನದಿಗಳನ್ನು ಎಲ್ಲೋ ಕುಳಿತು ಎಣಿಸಿದಂತೆ.ಯಾವುದೇ ಉತ್ಪ್ರೇ  ಕ್ಷೆಯಿಲ್ಲದ ಮಾತುಗಳಿವು ಎಂದು ಅವರನ್ನು ಸನಿಹದಿಂದ ಬಲ್ಲವರಿಗೆಲ್ಲಾ ಚಿರಪರಿಚಿತ.ಅವರ ಹತ್ತು ಹಲವು ಮಜಲುಗಳ ವೈವಿಧ್ಯ ಚಟುವಟಿಕೆಗಳನ್ನು ಸಾಮಾನ್ಯವಾಗಿ ಎಲ್ಲರೂ ಬಲ್ಲರು.ನಾನಿಲ್ಲಿ ಬರಗೂರು ಸರ್ ಬಗ್ಗೆ ಅಕಾಡೆಮಿಕ್‌ ಅಲ್ಲದ ಕೆಲವೇ ಸರಳ ಮಾತುಗಳಲ್ಲಿ ಬರೆಯಲು ಪ್ರಯತ್ನಪಡುವೆ. ಬರಗೂರರನ್ನ ಕಂಡಿದ್ದು ಪತ್ರಿಕೆಗಳಲ್ಲಿ ಅಂಕಣಗಳ ಮೂಲಕ.ಸಾಮಾನ್ಯವಾಗಿ ಆಯ್ದ ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಲೇಖನ, ಅಂಕಣಗಳನ್ನು ತಪ್ಪದೇ ಓದುತ್ತಿದ್ದೆ.ಬಿ.ಆರ್.ಬರಹಗಳನ್ನು ಮೆಚ್ಚುತ್ತಿದ್ದೆ.ನಂತರ ಅಲ್ಲಿಲ್ಲಿ ಜರುಗುವ ಕಾರ್ಯಕ್ರಮಗಳಲ್ಲಿ ದೂರದಿಂದ ಗಮನಿಸಿ ಭಾಷಣಗಳನ್ನು ಆಲಿಸುತ್ತಿದ್ದೆ.ನನ್ನ ವೈಚಾರಿಕ ಗುರುಗಳು ಸ್ವಾಮಿಯವರು ಒಮ್ಮೆ ಬಿ.ಆರ್.ರನ್ನು ತಮ್ಮ ಗುರುಗಳೆಂದೂ, ತಮ್ಮ ಅಧ್ಯಯನದ ಸಲುವಾಗಿ ಅವರು ವಹಿಸುತ್ತಿದ್ದ ವಿಶೇಷ ಆಸಕ್ತಿಯನ್ನು, ಪ್ರೀತಿ ಕಾಳಜಿಯನ್ನೂ ವರ್ಣಿಸಿ ತುಂಬು ಮೆಚ್ಚುಗೆಯಿಂದ ಸ್ಮರಿಸುವಾಗ ಸರ್ ಬಗ್ಗೆ ಮತ್ತಷ್ಟು ಅಭಿಮಾನವಾಯ್ತು. ಸ್ವಾಮಿ ಗುರುಗಳ ದೃಷ್ಟಿಯಲ್ಲಿ ಬರಗೂರರಿಗೆ ವಿಶೇಷ ಸ್ಥಾನಮಾನ. ಅದೇ ಭಾವದ ಮುಂದುವರಿಕೆ ನನ್ನಲ್ಲೂ. ಬಿ.ಆರ್.ಸರ್‌ನ ತೀರಾ ಹತ್ತಿರದಿಂದ ಕಂಡದ್ದು ಶ್ರವಣಬೆಳಗೊಳದಲ್ಲಿ. ನಮ್ಮ ಪರಿಚಯದ ಸ್ನೇಹಿತರೊಬ್ಬರು ಶ್ರವಣಬೆಳಗೊಳದಲ್ಲಿ ಸಿನೆಮಾ ಶೂಟಿಂಗ್ ನೋಡಲು ಆಹ್ವಾನಿಸಿದ್ದರು.ಬರಗೂರರು ಸಿನೆಮಾ ನಿರ್ದೇಶಕರು. ಸ್ನೇಹಿತರೊಂದಿಗೆ ತೆರಳಿ, ಕೆಲವು ಹೊತ್ತು ಅಲ್ಲಿದ್ದು ಸರ್‌ನ ಕೂಡ ಕ್ಲುಪ್ತವಾಗಿ ಮಾತನಾಡಿಸಿ ವಾಪಸ್ ಬಂದ ನೆನಪು. ನಂತರ ಮಾತನಾಡಲು ಸಿಕ್ಕಿದ್ದು ತೀರಾ ಕಡಿಮೆ.ಒಂದೆರಡು ಕಾರ್ಯಕ್ರಮಗಳಲ್ಲಿ ಪರಿಚಯಿಸಿಕೊಂಡಾಗ ಆತ್ಮೀಯವಾಗಿಯೇ ಮಾತನಾಡಿಸಿದರು. ಸಾಂಸ್ಕೃತಿಕ ವಿಷಯಗಳಿಗಾಗಿ ಆಗಾಗ ನಾನು ಮೆಸೇಜ್ ಮಾಡಿದಾಗ ತಪ್ಪದೇ ಉತ್ತರಿಸುವರು.ಶಿಕ್ಷಣ ಇಲಾಖೆಯ ಸುಧಾರಣೆಗೆ ಸಂಬಂಧಿಸಿದಂತೆ ಕೆಲವು ಅಹವಾಲು ಹೊತ್ತು ಡಿ ಎಸ್ ಈ ಆರ್ ಟಿ ಗೆ ತೆರಳಿದ್ದಾಗ ಪುಸ್ತಕ ಕಮಿಟಿ ಅಧ್ಯಕ್ಷರಾಗಿದ್ದ ಅವರು ಸುಮಾರು ಅವಧಿಯ ಕಾಲ ನಮ್ಮೊಂದಿಗೆ ಮಾತನಾಡಿ ಸಹನೆಯಿಂದ ಆಲಿಸಿ ಸೂಕ್ತ ಪ್ರತಿಕ್ರಿಯೆ ನೀಡಿದಾಗ ಅವರ ಸರಳತೆ, ಸಹೃದಯತೆ ಕಾಳಜಿ ಬಗ್ಗೆ ಖುಷಿಯಾಗಿತ್ತು.ಕೆಲವು ದಿನಗಳ ನಂತರ ಡಿ.ಎಸ್.ಈ.ಆರ್.ಟಿಯಲ್ಲಿಯೇ ಒಂದು ಕಾರ್ಯಕ್ರಮ ಆಯೋಜಿಸಿ ಪಠ್ಯಪುಸ್ತಕಕ್ಕೆ ಸಂಬಂಧಿಸಿದಂತೆ, ಗ್ರಂಥಾಲಯ ಸುಧಾರಣೆ ಕುರಿತಂತೆ ಸಲಹೆ ಸೂಚನೆ ನೀಡಲು ಬರಹಗಾರ ಶಿಕ್ಷಕರನ್ನು ಆಹ್ವಾನಿಸಿದ್ದರು.ಪಠ್ಯಪುಸ್ತಕ ಕಮಿಟಿಯಲ್ಲಿ ಬರಹಗಾರರಿದ್ದರೆ ಅದರ ಸ್ವರೂಪ ಮತ್ತಷ್ಟು ಉತ್ತಮವಾಗುತ್ತಿತ್ತೇನೋ ಎಂದ ಅವರ ದೂರದರ್ಶಿತ್ವದ ಮಾತಿನ್ನೂ ನನಗೆ ನೆನಪಿದೆ. ಸಾಂಸ್ಕೃತಿಕ ನೀತಿಯ ವರದಿಯನ್ನು ಸಿದ್ದಪಡಿಸಿದ್ದು, ಅದರ ಜಾರಿಗೆ ಸಾಂಸ್ಕೃತಿಕ ವಲಯ ಒತ್ತಾಯಿಸುತ್ತಿದ್ದುದನ್ನು ಗಮನಿಸುತ್ತಿದ್ದೆ. ಮತ್ತು ಆ ಸಂಬಂಧ ಕೆಲವು ಸಂದೇಶ ಕಳಿಸಿದ್ದು ಬಿಟ್ಟರೆ ನಂತರ ಅವರ ಸಿನೆಮಾ ಆರಂಭವಾಗುವಾಗ ಮತ್ತೆ ಮೆಸೇಜ್‌ಗಳು. ಸಾಂಸ್ಕೃತಿಕ ವಲಯದ ಕೆಲವು ಅಸಂಬದ್ಧ ನಿರ್ಣಯಗಳಿಂದ ನಮಗೆ ಹತಾಶೆಯಾದಾಗ ಪುನಃ ಸಂಪರ್ಕ ಮಾಡಿದ್ದೆ.ತಡಮಾಡದೇ ಪ್ರತಿಕ್ರಿಯಿಸುತ್ತಿದ್ದ ಅವರ ಸಂವಹನ ಗುಣ ಭರವಸೆ ತುಂಬುತ್ತಿತ್ತು. ತೀರಾ ಇತ್ತೀಚೆಗೆ ಲಾಕ್‌ಡೌನ್‌ ಆರಂಭವಾದಾಗ ಎಲ್ಲರೂ ಭೀತಿಯಿಂದ ಗೃಹಬಂಧನದ ರುಚಿ ನೋಡುವಂತಾಯಿತು. ಏಕತಾನತೆ ಹಾಗೂ ಕ್ಲೇಷಗಳನ್ನು ತಾತ್ಕಾಲಿಕವಾಗಿ ಮರೆಸುವ ಸಾಧನವಾಗಿ ಬರಹ ನೆರವಿಗೆ ಬಂದು ಒಂದಷ್ಟು ಕವಿತೆ ಬರೆದು ಹಿರಿಯ ಲೇಖಕರಿಗೆ ಕಳಿಸುವಾಗ ಬಿ.ಆರ್.ಸರ್ ಗು ಕಳಿಸಿದೆ. ಸಕಾರಾತ್ಮಕ ಸ್ಪಂದನೆಯಿಂದ ಹುರಿಗೊಂಡೆ.ಅದೇ ವೇಳೆಗೆ ಕೋಲಾರದ ಗೆಳೆಯರ ಯೋಜನೆಯೊಂದಕ್ಕೆ ಬರಗೂರರನ್ನ ಯೂಟ್ಯೂಬ್  ಚಾನಲ್ ಗೆ ಮೌಖಿಕವಾಗಿ ಪರಿಚಯಿಸುವ ಸದಾವಕಾಶ ದಕ್ಕಿತು. ಆ ಸಂದರ್ಭದಲ್ಲಿ ಅವರ ಕುರಿತು ಮತ್ತಷ್ಟು ತಿಳಿಯುವ ಸಲುವಾಗಿ  ಅಂತರ್ಜಾಲ ತಡಕಾಡುವಾಗ ದಕ್ಕಿದ್ದು ಅಪಾರ ಸಾಮಗ್ರಿ . ಅಲ್ಲಿಂದ ಶುರುವಾಯಿತು ನನ್ನ ಹುಡುಕುವಿಕೆ.ಅದೆಷ್ಟೊಂದು ದಾಖಲೆಗಳು.ಯೂಟೂಬ್ , ಪತ್ರಿಕೆ, ವಿಕಿಪಿಡಿಯಾದಲ್ಲೆಲ್ಲೆಲ್ಲಾ ಬಹಳಷ್ಟು ಮಾಹಿತಿಗಳು. ಓದುತ್ತಾ, ನೋಡುತ್ತಾ ಅವುಗಳಲ್ಲಿ ಕೆಲವು ತಪ್ಪಿಹೋದಾವೆಂದು ಎಚ್ಚರ ವಹಿಸುವಾಗ ಎಫ್.ಬಿ. ಪೇಜ್‌ ತೆರೆದು ಅಲ್ಲಿ ಸಂಗ್ರಹಿಸುತ್ತಾ ಹೋದೆ. ಅವರ ಸಾಮಾಜಿಕ ತುಡಿತ, ಸ್ಪಂದನೆ ಇಷ್ಟವಾಗುತ್ತ ಮತ್ತಷ್ಟು ಮಗದಷ್ಟು ಅಭಿಮಾನಿಯಾದೆ. ಸಮಾಜವನ್ನು,ತನ್ನ ಸುತ್ತಲಿನ ಪ್ರತೀ ಸಂದರ್ಭವನ್ನು ಕುರಿತು ಅವರ ಅಪೂರ್ವ ಒಳನೋಟವುಳ್ಳ ಗ್ರಹಿಕೆ, ಆ ಅರಿವಿನ ವಿಸ್ತಾರ, ಓದಿನ ವ್ಯಾಪ್ತಿ, ಮುಂದ್ಗಾಣಿಕೆ, ಮುಂದಾಲೋಚನೆ ದೂರದೃಷ್ಟಿಯ ಮಾತುಗಳು ನನಗೆ ಬೇರೆಯದೇ ವಿಶ್ವವನ್ನು ಮನಗಾಣಿಸತೊಡಗಿದವು. ಪ್ರತೀ ಕದಲಿಕೆಯನ್ನು ಅವರು ಕಾಣುವ ರೀತಿ, ವಿಮರ್ಶಿಸುವ ಪರಿ, ವಿಶಿಷ್ಟ ಆಯ್ಕೆ, ವಸ್ತು, ಘಟನೆ, ವಾತಾವರಣ, ಮೊದಲಾದವನ್ನ ಕಾಣಬೇಕಾದ ನೋಟದ ಪರಿಚಯ, ಮೊದಲಾದವುಗಳಲ್ಲಿ ಅವರಿಗೆ ಅವರೇ ಸಾಟಿ. ಸೂಕ್ಷ್ಮಾತಿಸೂಕ್ಷ್ಮ ಸ್ವಭಾವದ ಮೇಷ್ಟ್ರು ಎಳೆ ಗರಿಕೆಯ ಚಲನೆಯಲ್ಲೂ ಅದ್ಭುತವನ್ನು ಕಾಣಬಲ್ಲರು.ಕೂದಲು ಸೀಳಿದಂತಹ ಆಂತರಿಕ ಅವಲೋಕನದ ತಾಕತ್ತು ಅವರ ಅಗಾಧ ಶಕ್ತಿ.ಇಷ್ಟೆಲ್ಲ ವಿಷಯವನ್ನ ಅಂತರ್ಜಾಲದ ಮೂಲಕ ಮಾತ್ರ ಪಡೆದ ನನಗೆ ಅವರ ಶಿಷ್ಯ ವರ್ಗದವರ ಮೇಲೆ ಅಸೂಯೆಯಾಗಿದ್ದಂತೂ ಖರೆ.ಯುವ ಸಮುದಾಯವನ್ನು, ಯುವ ಪೀಳಿಗೆಯನ್ನು ಬಿ.ಆರ್.ಸರ್ ಪ್ರೋತ್ಸಾಹಿಸುವ ಪರಿಯ ಬಗ್ಗೆ ಅವರ ಆತ್ಮೀಯರಿಂದಲೇ ತಿಳಿಯಬೇಕು.ಅವರಿಂದ ಸಹಾಯ ಸಹಕಾರ ಪಡೆದಿರುವ ಅಪಾರ ಶಿಷ್ಯ ಬಳಗದ ದಂಡೇ ಇದೆ. ಯೂಟೂಬಿನಲ್ಲಿ ಅವರ ಹಾಗೂ ಅವರ ಪತ್ನಿಯವರ ಆತಿಥ್ಯ ಸತ್ಕಾರಗಳ ಬಗ್ಗೆ ತಿಳಿದು ಅಚ್ಚರಿಯಾಗಿತ್ತು. ಚಳುವಳಿ, ಸಂಘಟನೆ ಸಾಮಾಜಿಕವಾಗಿ ತೊಡಗಿಸಿಕೊಂಡವರಿಗೆ ಸೃಜನಾತ್ಮಕತೆ ಸಾಧ್ಯವಿಲ್ಲ ಎಂಬುದೊಂದು ಮಾತಿದೆ.ಅದನ್ನ ಸಾರಾಸಗಟಾಗಿ ಸುಳ್ಳು ಎಂದು ಪ್ರತಿಪಾದಿಸಿದವರು ಮೇಷ್ಟ್ರು.ಸಂವೇದನಾಶೀಲ ಬರಹಗಳ ಮೂಲಕ ಎಲ್ಲವನ್ನೂ ಸಮತೂಗಿಸಿ ತೋರಿಸಿದವರು. ಪದ್ಯಗಳ ಮೂಲಕವೂ ನವಿರುತನವನ್ನು ಸೊಗಸಾಗಿ ನಿರೂಪಿಸಿದವರು.ಒಂದು ವಿಷಯವನ್ನು ವಿಂಗಡಿಸಿ ವಿಶ್ಲೇಷಿಸುವುದರ ಮೂಲಕ ಆವಾಹಿಸಿಕೊಳ್ಳುವ ಮಾರ್ಗಗಳನ್ನು ಪರಿಚಯಿಸಿದವರು. ನಾಣೊಂದು ಪದ್ಯದಲ್ಲಿ ಕೊಂಚ ಸಂಘರ್ಷವನ್ನು ಅಡಕಗೊಳಿಸಿದಾಗ ‘ ಸಂವಹನ ಬೀದಿಯಲ್ಲಿ ನಿಂತು ಜಗಳವಾಡಿದಂತಿರಬಾರದು’ಎಂಬ ಮಾತಿನ ಮೂಲಕ ನಯವಾದ ಮಾತಿನ ಪೆಟ್ಟು ಕೊಟ್ಟು ತಿದ್ದಿದವರು.ಸಿನೆಮಾ ಮಾಧ್ಯಮದ ಮೂಲಕ ಅವರು ಸಾಧಿಸಿದ್ದು ಬಹಳ.ಕಲಾತ್ಮಕತೆ ಮೂಲಕ ಸದಭಿರುಚಿಯನ್ನು ಯಥೇಚ್ಚವಾಗಿ ಹಂಚಿದವರು. ಒಂದೊಂದು ಸಿನೆಮಾವು ಕ್ಲಾಸಿಕ್.ಸಾಹಿತ್ಯ ಅಕಾಡೆಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅವರ ಸಾಕಷ್ಟು ಕೆಲಸಗಳು ಇಂದಿಗೂ ಜನಜನಿತ.ಅವರ ಕತೆಗಳು, ಕವನಗಳು, ಅಂಕಣ ಬರಹಗಳು, ಕಾದಂಬರಿಗಳನ್ನು ಓದುವಾಗಅವರ ಸಂಪೂರ್ಣ ನಿಲುವು ಖಚಿವಾಗುತ್ತದೆ.ಬದ್ಧತೆ, ತಲ್ಲೀನತೆಗೆ ಅವರೇ ಮಾದರಿ.ವಿವಿಧ ಕ್ಷೇತ್ರಗಳಲ್ಲಿ ವೈವಿಧ್ಯತೆಯನ್ನು ಕಾಣಿಸಿದ ಅವರು ತೊಡಗಿಕೊಳ್ಳದ ಕ್ಷೇತ್ರಗಳೇ ಇಲ್ಲವೆನ್ನುವಷ್ಟು ಸಾಧಿಸಿದವರು. ಸ್ವತಃ ಪ್ರಾಧ್ಯಾಪಕರಾಗಿದ್ದು, ಈಗಲೂ  ಶೈಕ್ಷಣಿಕ ಸವಾಲುಗಳಿಗೆ ಸಕಾಲದಲ್ಲಿ ಧಾವಿಸಿ ನೀಡುವ ಸಲಹೆಗಳು, ರಾಜಕೀಯವಾಗಿ ಒದಗಿಸುವ ಮಾರ್ಗದರ್ಶನಗಳು ಮುತ್ಸದ್ದಿಯ ಅಸಾಧಾರಣಗುಣದವು. ಇಷ್ಟೆಲ್ಲಾ ಜ್ಞಾನ ದಕ್ಕಿದ್ದೂ ಕೂಡ ಪತ್ರಿಕೆ ಮತ್ತು ಅಂತರ್ಜಾಲದಲ್ಲಿಯೇ.ಇಷ್ಟೆಲ್ಲ ಹೇಳಲು ಅರ್ಹತೆಯಿದೆಯೋ ಇಲ್ಲವೋ,  ಸಂಕೋಚ ಮುಜುಗರದಿಂದಲೇ ಹೇಳಬೇಕಾಯಿತು. ಗ್ರಾಮೀಣ ಹಿನ್ನೆಲೆಯಿಂದ ಬದುಕನ್ನು ರೂಪಿಸಿಕೊಂಡು, ಸತತ ಪ್ರಯತ್ನ ಹಾಗೂ ನಿರಂತರ ಬದ್ಧತೆಯ ಛಲದ ಮೂಲಕ ಅಸಾಮಾನ್ಯ ಚಿಂತಕರಾದ, ಸಾಂಸ್ಕೃತಿಕ ಚಾಲಕರಾದ ಬಿ.ಆರ್.ಮೇಷ್ಟು ಜನ್ಮದಿನ ಅಕ್ಟೋಬರ್ ತಿಂಗಳಿನಲ್ಲಿಯೇ ಬರುತ್ತದೆ. ಈ ಹಿಂದೆ ಅವರ ಬಳಗ ಏರ್ಪಡಿಸಿದ್ದ ‘ಬರಗೂರು-೭೦, ವಿಚಾರ ಸಂಕಿರಣ’ ದಲ್ಲಿ ಪಾಲ್ಗೊಂಡ ಖುಷಿ ನನ್ನದು.ಈಗಲೂ ಇದೇ ಅಕ್ಟೋಬರ್ ೨೯ ರಂದು ಬೆಳಗ್ಗೆ ಅವರ ಶಿಷ್ಯವರ್ಗ ರಾಷ್ಟ್ರೀಯ ವೆಬಿನಾರ್‌ ಆಯೋಜಿಸಿ ಗುರುಗಳ ಬಗ್ಗೆ ಹಿರಿಯ ಲೇಖಕರಿಂದ ಮಾತನಾಡಿಸಲಿದ್ದಾರೆ.ಶೀರ್ಷಿಕೆ- ನಮ್ಮ ಮೇಷ್ಟ್ರು, ನಮ್ಮ ಹೆಮ್ಮೆ. ಹೆಮ್ಮೆಯ ಸಂಗತಿಯೇ. ಬರಗೂರರ ಬಳಗ, ಅಭಿಮಾನಿಗಳು, ಅವರ ಅನುಯಾಯಿಗಳ ಸಂಖ್ಯೆ ಅಪಾರ. ಅವರ ಕುರಿತು ಅದೆಷ್ಟೋ ಪಿ.ಎಚ್.ಡಿ.ಗಳಾಗಿವೆ. ಬರಹಗಳು, ಲೇಖನಗಳು ಬಂದಿವೆ. ಆ ಮಟ್ಟಕ್ಕಲ್ಲದಿದರೂ ಕಿರು ಅಭಿಮಾನಿಯಾಗಿ ಅಕ್ಷರಗಳಲ್ಲಿ ಹಿಡಿಯಲು ಸಾಧ್ಯವಾಗದೆ ಕೆಲವೇ ಪದಗಳಲ್ಲಿ ಗ್ರಹಿಕೆಗೆ ದಕ್ಕಿದಂತೆ ದಾಖಲಿಸಲು ಯತ್ನಿಸಿರುವೆ. ************************************** ಫೋಟೊ ಆಲ್ಬಂ

ಬರಗೂರರೆಂಬ ಬೆರಗು Read Post »

ಕಾವ್ಯಯಾನ

ಪ್ರಕೃತಿ

ಕವಿತೆ ಪ್ರಕೃತಿ ಭಾಗ್ಯ ಸಿ ಮನುಜ ಜೀವನದ ಅವಿಭಾಜ್ಯ ಅಂಗ ಪ್ರಕೃತಿಜತನದಲಿ ಕಾಪಾಡಿಕೊಳ್ಳುವುದಾಗಬೇಕು ನಮ್ಮ ಪ್ರವೃತ್ತಿಗಾಳಿ,ಬೆಳಕು,ನೀರು ಎಲ್ಲಾ ಪ್ರಕೃತಿಯ ಒಡಲಲಿ ನಗುತಿರೆಮನುಜನ ಜೀವನವು ವಜ್ರದಂತೆ ಹೊಳೆಯುತ್ತಿರೆ ವಿಪರೀತ ಬಯಕೆಗೆ ಪರಿಸರ ಬಲಿಪ್ರಾಣಿ ಪಕ್ಷಿಗಳ ಆಸರೆಗಿಟ್ಟ ಕೊಡಲಿಸಣ್ಣ ಮಳೆಗೂ ಕುಸಿಯುತ್ತಿದೆ ಬೆಟ್ಟ ಗುಡ್ಡಜಲಪ್ರಳಯ, ಚಂಡಮಾರುತ ಸೀಳಿದೆ ಅಡ್ಡಡ್ಡ ಬಳಲಿಕೆ ನಿವಾರಣೆಗೆ ಬೇಕು ನೀರುಪಂಚಭೂತಗಳ ನಿರ್ವಹಣೆ ಹೊತ್ತವರಾರುಪ್ರಕೃತಿಯ ಒಡಲ ಸೀಳಿ ತಲೆಯೆತ್ತಿವೆ ಕಟ್ಟಡಗಳುಅವೈಜ್ಞಾನದ ಫಲವಾಗಿ ಉರುಳುತ್ತಿವೆ ತಲೆಗಳು ಅಪ್ಪಿಕೋ ಚಳುವಳಿಯ ರೂವಾರಿ ತಾಯಿಹದಿನೇಳನೆ ಶತಮಾನದ ಅಮೃತಾದೇವಿ ಬಿಷ್ಣೋಯಿಅಧಿಕಾರವಲ್ಲ ಅಸ್ತಿತ್ವವಿದೆ ನಮಗೆ ಪ್ರಕೃತಿಯೊಂದಿಗೆಸಂದೇಶ ಬಿಟ್ಟಿದ್ದಾರೆ ಪ್ರಾಣ ತ್ಯಾಗದೊಂದಿಗೆ ಅರಿಯಬೇಕಿದೆ ಜೋಧಪುರದ ಹೆಣ್ಣು ಮಗಳ ಕಾಳಜಿಯನ್ನುವ್ಯರ್ಥವಾಗಲು ಬಿಡಬಾರದು ಬಿಷ್ಣೋಯಿ ಜನರ ತ್ಯಾಗವನ್ನುಓ ವಿಶ್ವ ಮಾನವರೆ ಸಿದ್ದರಾಗಿ ಪೋಷಿಸಲು ನೀವಿನ್ನುಸೃಷ್ಠಿಯ ವಿಶೇಷವಾದ ಚರಾಚರ ಚೈತನ್ಯವನ್ನು **********************************************************

ಪ್ರಕೃತಿ Read Post »

ಕಾವ್ಯಯಾನ

ನಕ್ಷತ್ರ ನೆಲಹಾಸು

ಕವಿತೆ ನಕ್ಷತ್ರ ನೆಲಹಾಸು ಸ್ವಭಾವ ಕೋಳಗುಂದ ನಕ್ಷತ್ರಗಳ ಹಾದಿಗುಂಟ ಹಾಸಿಸಿಂಗರಿಸಿ ನಿನ್ನ ಕೊಳಲ ಪಾದನೆನಪಿನೆದೆಯ ತುಳಿಯಲಾಶಿಸಿದೆ ಅರ್ಧ ಕತ್ತಲಲಿ ಎದ್ದು ಹೊರಟುನಿನ್ನ ತಬ್ಬಲಿ ಮಾಡಿನಾ ಬುದ್ಧನಾಗಲಾರೆ ಈ ಹಾದಿಗಳೆಲ್ಲಾಎಷ್ಟೊಂದು ಆಮಿಷ ಒಡ್ಡುತ್ತಿವೆಹೃದಯ ಬಂಧಿಯ ಮುಕ್ತಿಗಾಗಿ ನನ್ನೊಳಗಿನ ಸೀತಾಮೀನ ಮೊಟ್ಟೆಯ ಕಾವಲಲಿಸಾವಿರ ಸಂತತಿಯ ಬೆಳಕು ನನ್ನ ಅಸ್ತಿತ್ವದ ಬಿಂದುವಿಗೆನಿನ್ನೊಲವಿನ ಮೊಲೆಹಾಲ ಸ್ಪುರಣಭರವಸೆಯ ಮುತ್ತ ಮಣಿಹಾರ ಹಿಮ ಮಣಿಯ ಮರಳಿನಮರೀಚಿಕೆಯ ಸಾಗರಪಾರಿಜಾತದ ಪರಿಮಳದ ಸಂದೇಶ ಹನಿ ಬೀಜಕ್ಕೆ ಸಾವಿರ ಸಂತಾನನೆಲದ ನಾಲಗೆಯಲಿಸಾವಿನ ಸಂಚಾರಿ ಹಸಿ ಮಣ್ಣ ಮೈಯೊಳಗೆಕನಸ ಕಲ್ಪನೆಯ ಕೂಸುಬಿತ್ತಿ ನಡೆದು ಬಿಡು ನಕ್ಷತ್ರದ ನೆಲಹಾಸು *********************

ನಕ್ಷತ್ರ ನೆಲಹಾಸು Read Post »

ಇತರೆ, ಜೀವನ

ಹೀಗೇಕೆ ನನ್ನವ್ವ ?

ಲೇಖನ ಹೀಗೇಕೆ ನನ್ನವ್ವ ? ಸುಮಾ ಆನಂದರಾವ್       ಇಂದೇಕೆ ನನ್ನವ್ವ ಪದೇ ಪದೇ ನೆನಪಾಗುತ್ತಿದ್ದಾಳೆ? ಅವಳೇಕೆ ಹಾಗಿದ್ದಳು?                  ಜೆರ್ಮನಿಯಲ್ಲಿ  ಒಬ್ಬ  ವಯೋ ವೃದ್ಧೆಯ ಪರಿಚಯವಾದಂದಿನಿಂದ ಗಮನಿಸುತ್ತಿದ್ದೇನೆ.  ಅವಳ ದಿಟ್ಟತನ ಅಚ್ಚರಿ ಉಂಟುಮಾಡುತ್ತಿದೆ. ಅವಳು ತನ್ನೆಲ್ಲಾ  ಕರ್ತವ್ಯ ಮುಗಿಸಿದ್ದಳು, ಮಕ್ಕಳನ್ನು ಓದಿಸಿ ಅವರ ಕಾಲಮೇಲೆ ಅವರು ನಿಲ್ಲುವ ಹಾಗೆ ಮಾಡಿದ್ದಾಳೆ. ಆಗಾಗ ಮಕ್ಕಳು ಬಂದು ಹೋಗುತ್ತಿರುತ್ತಾರೆ. ತೊಂಬತ್ತು ವರ್ಷಆದರೂ ತನ್ನ ಕೆಲಸ ತಾನೇ ಮಾಡಿಕೊಳ್ಳುತ್ತಾಳೆ, ಕೈಯಲ್ಲಿ ಕೋಲು  ಹಿಡಿದು ಸಣ್ಣ ನೂಕುವ ಗಾಡಿಯಲ್ಲಿ ಅಗತ್ಯ ವಸ್ತುಗಳನ್ನು ಕೊಂಡು ತರುತ್ತಾಳೆ, ಇಲ್ಲಿ ಬಹಳಷ್ಟು ವಯಸ್ಸಾದವರು ನಡೆದೇ ಹೋಗುತ್ತಿರುತ್ತಾರೆ. ಅವರೆಲ್ಲರೂ ಬೈಸಿಕಲ್ ತುಳಿಯುವ ಪರಿ ನೋಡಿದರೆ ಗೊತ್ತಾಗುತ್ತದೆ ,  ಇದೆಲ್ಲ ಅವರಿಗೆ ಚಿಕ್ಕಂದಿನ ಅಭ್ಯಾಸ ಎಂದು. ಮೊಮ್ಮಕ್ಕಳನ್ನು ಅಜ್ಜ ಅಜ್ಜಿಯರು ಸುತ್ತಾಟಕ್ಕೆ ಕರೆದುಕೊಂಡು ಹೋಗಿ ಅಲ್ಲಿಯ ವಿಷಯಗಳನ್ನು ತಿಳಿಸುವ ಪರಿ ಬೆರಗು ಮೂಡಿಸುತ್ತದೆ. ಇಲ್ಲಿಯ ಸರಕಾರ ನಿವೃತ್ತಿ ವೇತನ ಕೈತುಂಬ ಕೊಡುತ್ತಾರೆ, ಅಂತೇಲೆವಯಸ್ಸಾದವರು  ಕಣ್ಣಗೆ ಕಂಡ ಬಟ್ಟೆ ತೊಟ್ಟು ಸಂತಸದಿಂದ ಉತ್ಸಾಹವಾದ ಜೀವನ ನಡೆಸುತ್ತಾರೆ. ಅವರಲ್ಲೂ ಮಮಕಾರಗಳು, ಅನುಬಂಧಗಳಿವೆ. ಮಕ್ಕಳು ಮೊಮ್ಮಕ್ಕಳು, ಅಕ್ಕ ತಂಗಿ ಹೀಗೆ ಸಂಬಂಧಗಳು ಗಟ್ಟಿಯಾಗಿರುತ್ತವೆ ಎಂದು ತಿಳಿದದ್ದು ಆ ಜರ್ಮನ್ ಮಹಿಳೆಯಿಂದ. ಆಕೆಗೆ ಬದುಕನ್ನು ಎದುರಿಸುವ ರೀತಿಯನ್ನು ಅವರಮ್ಮ ” ಕ್ರಿಸ್ಟಿನಾ”  ಹೇಳಿಕೊಟ್ಟಳಂತೆ.               ” ಕ್ರಿಸ್ಟಿನಾ” ಆಕೆಯ ಫೋಟೋ ನೋಡಿದಾಗ ತಟ್ಟನೆ ನನಗೆ ನನ್ನವ್ವ ನೆನಪಾದಳು. ಈಗ್ಗೆ ಆಕೆ ಇದ್ದರೆ ೧೩೦ ವರ್ಷ. ಬಹುಶಃ ನನ್ನವ್ವನ ಆಸುಪಾಸಿನವಳೇ. ಕ್ರಿಸ್ಟಿನಾ ಎಷ್ಟು ಚೆಂದ ಇದ್ದಾಳೆ! ಆಧುನಿಕ ಮಹಿಳೆಯಂತೆ ಅಲಂಕಾರ! ವಿದ್ಯಾವಂತಳು, ವಿಜ್ಜ್ನಾನಿ,  ಸಬಲೆ. ಇಲ್ಲಿ ಹೆಣ್ಣುಮಕ್ಕಳಿಗೆ ಶತ ಶತಮಾನಗಳಿಂದಲೂ ಸಮಾನತೆ, ಸ್ವತಂತ್ರತೆಯ ಹಕ್ಕು ಇತ್ತು. ಆದರೆ ನನ್ನವ್ವ ಏಕೆ ಹಾಗಿದ್ದಳು?               ಅವ್ವ ಎಂದರೆ ನಮ್ಮ ತಂದೆಯ ತಾಯಿ ಹನುಮಕ್ಕ. ಅವಳದು ನಾಗಸಮುದ್ರ ತವರು ಮನೆ, ಗಂಡನ ಮನೆ ಸಂಡೂರು ತಾಲೂಕಿನ ಬಂಡ್ರಿ . ಆಕೆಗೆ ಐದು ಗಂಡುಮಕ್ಕಳು ಎರೆಡು ಹೆಣ್ಣು ಮಕ್ಕಳು. ತುಂಬು ಕುಟುಂಬ, ಗಂಡ ಶಾನುಭೋಗರು ರಾಘಪ್ಪ ದತ್ತು ಪುತ್ರ. ಆತನ ಅಜ್ಜಿಪುಟ್ಟಮ್ಮ ಮಗಳ ಮಗ ಅಂದರೆ  ಮೊಮ್ಮಗನನ್ನು ತನ್ನ ಸಮಸ್ತ ಆಸ್ತಿಗೂ ವಾರಸುದಾರನನ್ನಾಗಿ ಮಾಡಿದ್ದಳು.               ನನ್ನವ್ವ ಹನುಮಕ್ಕನಿಗೆ  ಕೊನೆಯ ಮಗ ನಮ್ಮಪ್ಪ.  ಹಾಗಾಗಿ ಅವ್ವನಿಗೆ ವಯಸ್ಸಾಗಿತ್ತು. ನಾನು ಹನ್ನೆರೆಡು ವಯಸ್ಸಿಗೆ ಬರುವವರೆಗೂ ಮಾತ್ರ ಇದ್ದಳು. ತಂಗಿ ತಮ್ಮಂದಿರು ಹುಟ್ಟುವವರೆಗೂ ಅವ್ವನೇ ಗೆಳತಿ. ನನ್ನಮ್ಮ , ಅವ್ವನಿಗೆ ತಮ್ಮನ ಮಗಳು ಸೋದರ ಸೊಸೆಯನ್ನೇ ಮಗನಿಗೆ ತಂದುಕೊಂಡಿದ್ದಳು. ಅವ್ವ  ಒಳ್ಳೆಯ ಬಣ್ಣ. ಉದ್ದನೆಯ ಮೂಗು, ಪುಟ್ಟ ಬಾಯಿ  ನಿಜಕ್ಕೂ ಸುಂದರಿ. ಆದರೆ ಮಡಿ ಹೆಂಗಸು. ಅಂತಹವರು ಉಡುವ ಸೀರೆಗಳು ಬೇರೆ ರೀತಿಯೇ ಇರುತ್ತಿದ್ದವು . ಯಾವಾಗಲು ಸೆರಗು ಹೊದ್ದು ತಲೆ ಮುಚ್ಚಿಕೊಂಡಿರುತ್ತಿದ್ದಳು .  ನಾನು ಅವ್ವನ ಪಕ್ಕ ಮಲಗುತ್ತಿದ್ದೆ ರಾತ್ರಿ ಹೊತ್ತು ಅವಳನ್ನು ಹತ್ತಿರದಿಂದ ನೋಡಿ ನನ್ನ ಮುಗ್ದ ಮನಸ್ಸಿಗೆ ನೂರಾರು ಯೋಚನೆ ಬರುತ್ತಿತ್ತು. ಅವ್ವನೇಕೆ ಎಲ್ಲರಹಾಗಿಲ್ಲ?               ಅವಳ ಆ ವಿರೂಪವು ಪ್ರಶ್ನಾರ್ಥಕ ಚಿನ್ಹೆ ಯಾಗಿರುತ್ತಿತ್ತು. ಒಂದೊಮ್ಮೆ ನಾನು ”ಅವ್ವ ನೀ ಹೀಗೇಕೆ? ಎಲ್ಲರಂತೇಕಿಲ್ಲ? ಎಂದಾಗ ಏನು ಹೇಳದೆ ಕಣ್ಣ ತುಂಬ ನೀರು ತುಂಬಿದಳು. ಅದೆಷ್ಟು ನೋವನುಂಗಿದ್ದಳೋ ಕಣ್ಣೀರನ್ನು ಹೊರಗೆ ಬಿಡದೆ ತಡೆಯುತ್ತಿದ್ದುದು ಕಣ್ಣಿಗೆ ಕಟ್ಟಿದಂತಿದೆ. ನನಗೆ ಅವ್ವನ ಮೇಲೆ ಅಪಾರ ಪ್ರೀತಿ. ಪ್ರತಿದಿನ ರಾತ್ರಿ ನನ್ನ  ತಲೆಸವರುತ್ತಾ ಬಂಡ್ರಿ  ಕತೆಯನ್ನೆಲ್ಲ ಹೇಳುತ್ತಿದ್ದಳು.               ಬಂಡ್ರಿಯ ಜಮೀನ್ದಾರ  ಸಾಹುಕಾರ ರಾಗಪ್ಪನಿಗೆ ತನ್ನಪ್ಪ ತನ್ನನ್ನು ಮದುವೆ  ಮಾಡಿ ಕೊಟ್ಟಿದ್ದು, ಅಜ್ಜಿ ಮೊಮ್ಮಗ ಇಬ್ಬರೇ ಇದ್ದ ಆ ಮನೆಗೆ ತಾನು ಕಾಲಿಟ್ಟಿದ್ದು, ಆ ಸಿರಿವಂತಿಕೆ, ಮರ್ಯಾದೆ ಎಲ್ಲವನ್ನು ಕಂಡು ಕೊನೆ ಕಾಲಕ್ಕೆ  ಊರಿನ ವ್ಯಾಜ್ಯದಲ್ಲಿ ಮುಗ್ದ ರಾಗಪ್ಪನ ಕರಗಿದ ಆಸ್ತಿ  ಎಲ್ಲವನ್ನು ಸಹಿಸಿ  ಗಟ್ಟಿಯಾದ ಬಂಡೆಯಂತಾಗಿದ್ದಳು ನನ್ನವ್ವ.               ಇಬ್ಬರು ಹೆಣ್ಣುಮಕ್ಕಳಿಗೆ ಮದುವೆ ಮಾಡಿ, ಐದು ಗಂಡುಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ತಮ್ಮ ಕಾಲ ಮೇಲೆ ತಾವು ನಿಲ್ಲುವಂತೆ ಮಾಡಿದ ಚತುರೆ ಅವ್ವ. ಊರಲ್ಲಿ ನಡೆಯುವ ಯಾವ ಕಲುಷಿತ ಗಾಳಿ ತನ್ನ ಮಕ್ಕಳ ಮೇಲೆ ಬೀಳದಂತೆ ತಡೆದು ಅವರನ್ನೆಲ್ಲ ಉಚ್ಛ ಹುದ್ದೆಗೆ ಸೇರಿಸಿದ ಧೈರ್ಯ ಮೆಚ್ಚಲೇಬೇಕು.               ತಾತ ತುಂಬಾ ಮೆದುಸ್ವಭಾವದವರಂತೆ ನಾನು ನೋಡಿರಲಿಲ್ಲ. ನನ್ನಪ್ಪನಿಗೆ ಕೆಲಸ ಸಿಕ್ಕ ಸಂತಸವನ್ನು ಊರೆಲ್ಲ ಹಂಚಿ  ಅಂದೇ ಇಹಲೋಕ ತ್ಯೆಜಿಸಿದರಂತೆ.  ಮಕ್ಕಳಿಗೆ ಹಾಸಿಗೆ ಇದ್ದುದರಲ್ಲಿ ಕಾಲು ಚಾಚು ರೀತಿ ಹೇಳಿಕೊಟ್ಟಿದ್ದು ಅವ್ವ. ಐದು ಜನರು ಒಳ್ಳೆಯ ಹುದ್ದೆಯಲ್ಲಿದ್ದರು. ಅವರ ವಿದ್ಯೆಯೇ ಅವರಿಗೆ ದಾರಿದೀಪವಾಗಿತ್ತು. ಅವ್ವ ಒಂದು ಮಾತು ಹೇಳುತ್ತಾ ಇದ್ದಳು “ಆಸ್ತಿ ಯಾವತ್ತೂ ಶಾಶ್ವತ  ಅಲ್ಲ ವಿದ್ಯೆ ಯಾವತ್ತೂ ಯಾರು ಕಸಿದುಕೊಳ್ಳದ ಆಸ್ತಿ”. ಅವ್ವನಿಗೆ ಆ ಊರು ಅಲ್ಲಿಯ ವ್ಯಾಜ್ಯಗಳು ಎಷ್ಟೊಂದು ಹೈರಾಣಗೊಳಿಸಿತ್ತೆಂದರೆ ತನ್ನ ಮಕ್ಕಳು ಯಾರು ಅಲ್ಲಿ ನೆಲೆಸಿಲ್ಲ ಎಂದು ಯಾವತ್ತೂ  ಕೊರಗುತ್ತಿರಲಿಲ್ಲ. ಬದಲಿಗೆ ಐದು ಜನರು ತಮ್ಮ ಕಾಲ ಮೇಲೆತಾವು ನಿಂತು ಅಚ್ಚುಕಟ್ಟಾಗಿ ಸಂಸಾರ ನಡೆಸುವುದ ಕಂಡು ಹೆಮ್ಮೆಪಟ್ಟುಕೊಳ್ಳುತ್ತಿದ್ದಳು.               ನಾಗಸಮುದ್ರದಿಂದ ನನ್ನವ್ವನ ತಮ್ಮ , ನನ್ನ ಅಮ್ಮನ ತಂದೆ  ತಾತ ಬಂದರೆ ಅಕ್ಕ ತಮ್ಮನ ಮಾತಿನ ಧಾಟಿ, ಉಭಯಕುಶಲೋಪರೀ, ಮಕ್ಕಳ ಬಳಿ ಹೇಳಲಾಗದ್ದನ್ನು ತಮ್ಮನ ಬಳಿ ಹೇಳುವುದು, ತಾತನೋ ಮಗಳು ಮೊಮ್ಮಕ್ಕಳ ಜೊತೆ ಅಕ್ಕನಿಗೂ ತವರು ಮನೆಗೆ ಕರೆದೊಯ್ಯುವುದು ಎಷ್ಟು ಚೆಂದ ಇತ್ತು! ತಾತನ ಪ್ರಭಾವ ಎಷ್ಟಿತ್ತೆಂದರೆ ಅಪ್ಪ ದೊಡ್ಡಪ್ಪಂದಿರೆಲ್ಲ ಅವ್ರಮ್ಮನನ್ನು ತಾತ ಕರೆದಂತೆ ತಾವು ಅಕ್ಕ ಅಂತೇಲೇ ಕರೆಯುತ್ತಿದ್ದರು.               ” ನನ್ನಕ್ಕ ತೆಳ್ಳಗೆ ಬೆಳ್ಳಗೆ ಹಣೆತುಂಬಾ ಕುಂಕುಮ ಇಟ್ಟು, ಜಡೆಹೆಣೆದ ಕೂದಲನ್ನು ತುರುಬು ಕಟ್ಟಿ, ಸಿಹಿ ನೀರ ಬಾವಿಯಿಂದ ತಲೆ ಮೇಲೊಂದು ಕೊಡ ಕೈಯ್ಯಲ್ಲೊಂದು ಕೊಡ ಹಿಡಿದು ಬರುತ್ತಿದ್ದಳು, ಆಗ ಎಷ್ಟು ಗಟ್ಟಿಮುಟ್ಟಾಗಿದ್ದಳು ಬಹಳ ಸುಂದರಿ ” ಎಂದು ತಮ್ಮ ಹೇಳುತ್ತಿದ್ದರೆ ನನ್ನವ್ವ ವಿಷಾದದ ನಗೆ ಬೀರುತ್ತಿದ್ದಳು. ಆ ನಗೆಯ ಹಿಂದೆ ಅದೆಷ್ಟು ನೋವಿತ್ತೋ               ಅವ್ವನಿಗೆ ಯಾರು ಹಾಗಿರಲು ಒತ್ತಾಯಮಾಡಿರಲಿಲ್ಲ, ಅಂದಿನ ಸಮಾಜಕ್ಕೆ ಹೆದರಿಯೋ ತನ್ನ ಗೆಳತಿಯರು ಅಕ್ಕತಂಗಿಯರಂತೆ  ತಾನಿರಬೇಕೆಂಬ ಭ್ರಮೆಯೋ ಒಟ್ಟಿನಲ್ಲಿ ವಿರೂಪಿಯಾಗಿದ್ದಳು.               ಇಂದು ಕ್ರಿಸ್ಟಿನಾಳ ಫೋಟೋ ನೋಡಿದಾಗಿಂದ ಮನದಲ್ಲೇನೋ ಹೊಯ್ದಾಟ. ನನ್ನವ್ವನಲ್ಲೂ ಅವಳಷ್ಟೇ ದಿಟ್ಟತನ, ಮಕ್ಕಳನ್ನು  ಸನ್ಮಾರ್ಗದಿ ಬೆಳೆಸುವ ಅಗಾಧ ಶಕ್ತಿ,ಕಷ್ಟಗಳನ್ನು ಸಹಿಸಿ ಕುಟುಂಬವನ್ನು ಮೇರು ಮಟ್ಟಕ್ಕೆ ತರುವಛಲ ಇವೆಲ್ಲ ಗಮನಿಸಿದಾಗ  ಅವಳೊಬ್ಬ ಕೌಟುಂಬಿಕ ವಿಜ್ಜ್ಞಾನಿಯಾಗಿದ್ದಳಲ್ಲವೇ ? ಮತ್ತೇಕೆ ಅವಳಿಗೆ ಆ ವಿರೂಪ?  ಅದು ಅವಳಿಗೆ ಹಿಡಿದ ಗ್ರಹಣವೇ?  ಗ್ರಹಣವಾಗಿದ್ದರೆ ಬಿಡಬೇಕಿತ್ತಲ್ಲವೇ? ಇಲ್ಲ ಅದು ಶಾಪ ಹೌದು ನನ್ನವ್ವ ಶಾಪಗ್ರಸ್ತೆ. ******************************************

ಹೀಗೇಕೆ ನನ್ನವ್ವ ? Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಅಂಕಣ ಬರಹ ಅಲೆಯ ಮೊರೆತ ಅಲೆಯ ಮೊರೆತ( ಕಾದಂಬರಿ)ತಮಿಳು ಮೂಲ : ಕಲ್ಕಿಅನುವಾದ : ಶಶಿಕಲಾ ರಾಜಪ್ರ : ಸಾಹಿತ್ಯ ಅಕಾಡೆಮಿಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೪೨೦ಪುಟಗಳು : ೬೯೨ ವಾಸ್ತವವಾದಿ ಶೈಲಿಯಲ್ಲಿರುವ ಈ ಕಾದಂಬರಿಯು ಒಂದು ಕಾಲ್ಪನಿಕ ಕಥೆಯನ್ನು ವಸ್ತುವಾಗಿ ಹೊಂದಿದ್ದರೂ  ಭಾರತಕ್ಕೆ ಸ್ವಾತಂತ್ರ್ಯ   ಸಿಗುವ ಮೊದಲು ನಡೆದ ಎಲ್ಲ ಸಂಗತಿಗಳನ್ನೂ ಐತಿಹಾಸಿಕ ಸತ್ಯಗಳೊಂದಿಗೆ ಯಥಾವತ್ತಾಗಿ ನಿರೂಪಿಸುತ್ತದೆ.         ಪಟ್ಟಾಮಣಿಯಮ್ ಕಿಟ್ಟಾವಯ್ಯರ್, ಸರಸ್ವತಿ ಅಮ್ಮಾಳ್, ಪದ್ಮಾಚಲ ಶಾಸ್ತಿç ಅಯ್ಯರ್, ಕಾಮಾಕ್ಷಿ ಅಮ್ಮಾಳ್, ದೊರೆಸ್ವಾಮಿ ಅಯ್ಯರ್, ರಾಜಮ್ಮ, ಲಲಿತಾ, ಸೀತಾ, ಸೌಂದರ್ ರಾಜನ್, ಸೂರ್ಯ, ಪಟ್ಟಾಭಿರಾಮನ್, ಧಾರಿಣಿ, ಅಮರನಾಥ, ಚಿತ್ರಾ ಮೊದಲಾದವು ಇಲ್ಲಿ ಎದ್ದು ಕಾಣುವ ಪಾತ್ರಗಳು. ಇವರೆಲ್ಲರ ವೈಯಕ್ತಿಕ ಹಾಗೂ  ಕೌಟುಂಬಿಕ ಬದುಕಿನ ವಿವರಗಳು , ಗ್ರಾಮೀಣ ಹಾಗೂ ನಗರ ಬದುಕಿನ  ಚಿತ್ರಗಳು, ಸ್ವಾತಂತ್ರ್ಯ  ಹೋರಾಟ, ಬಿಳಿಯರ ಸರಕಾರದ ಆಡಳಿತ ವೃತ್ತಾಂತಗಳು, ಕಾಂಗ್ರೆಸ್ ಮತ್ತು ಸೋಷಲಿಸ್ಟ್  ಸಂಘಟನೆಗಳು ನಡೆಸಿದ ಹೋರಾಟದ ಚಿತ್ರಗಳು ಇಲ್ಲಿವೆ.  ಸರಕಾರದ ದೌರ್ಜನ್ಯದ ವಿರುದ್ಧ ಪ್ರತಿಭಟಿಸುವ ಕ್ರಾಂತಿವೀರ ಯುವಕರು ರಹಸ್ಯವಾಗಿ ನಡೆಸುವ ಸಿದ್ಧತೆಗಳು, ಅವರನ್ನು ಬಂಧಿಸಲು ಪೋಲಿಸರು ನಡೆಸುವ ಪ್ರಯತ್ನಗಳು,  ಬಂಧನ, ಜೈಲುವಾಸ, ಕೈದಿಗಳು ತಪ್ಪಿಸಿಕೊಳ್ಳಲು ಮಾಡುವ ಒದ್ದಾಟಗಳ ಚಿತ್ರಣಗಳಿವೆ.  ಭಾರತದಲ್ಲಿ ಅಸ್ತಿತ್ವದಲ್ಲಿದ್ದ ಸ್ಥಾನೀಯ ರಾಜರುಗಳು ತಮ್ಮ ತಮ್ಮೊಳಗೆ ಕಾದಾಡಿ ಹೊರಗಿನಿಂದ ಮುಸಲ್ಮಾನರೂ ಆಂಗ್ಲರೂ ಬಂದು ಇಲ್ಲಿ ನೆಲೆಯೂರಲು ಕಾರಣರಾದದ್ದು ಹೇಗೆ ಎಂಬ ಬಗ್ಗೆ ಚರ್ಚೆಗಳಿವೆ.  ಮುಸಲ್ಮಾನರ ಆಕ್ರಮಣ, ಆಡಳಿತ ಮತ್ತು ಹಿಂದೂ ಧಾರ್ಮಿಕ ಕೇಂದ್ರಗಳನ್ನು ನಾಶ ಮಾಡಿ ಅವರು ಮಸೀದಿಗಳನ್ನು ಸ್ಥಾಪಿಸಿದ್ದು, ಹಿಂದೂ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿ ಅವರನ್ನು ತಮ್ಮ ಜನಾನಾದಲ್ಲಿರಿಸಿಕೊಂಡದ್ದು, ಬಲಾತ್ಕಾರವಾಗಿ ಮತಾಂತರಗೊಳಿಸಿದ ವಿವರಗಳಿವೆ.  ಇವೆಲ್ಲದರ ಜತೆಗೆ ಬ್ರಿಟಿಷರ ದಾಸ್ಯದಿಂದ ಭಾರತವನ್ನು ಬಂಧಮುಕ್ತಗೊಳಿಸಲು ಉಪವಾಸ ಸತ್ಯಾಗ್ರಹ-ಅಹಿಂಸಾ ವ್ರತಗಳ ಮೂಲಕ ಹೋರಾಟ ನಡೆಸಿದ ಗಾಂಧೀಜಿಯವರ ಬಗ್ಗೆ ಇಲ್ಲಿ ಕೆಲವು ಪಾತ್ರಗಳಿಗೆ ಅಪಾರವಾದ ಭಕ್ತ-ಗೌರವಗಳಿದ್ದರೆ ಇನ್ನು ಕೆಲವು ಪಾತ್ರಗಳಿಗೆ ಅವರಿಂದಾಗಿಯೇ ಭಾರತವು ಎರಡು ಹೋಳಾಗಿ ಬಿಟ್ಟಿತು ಎಂಬ ಅಸಮಾಧಾನ ವ್ಯಕ್ತವಾಗಿದೆ.  ಭಾರತಕ್ಕೆ ಸ್ವಾತಂತ್ರ್ಯ ದೊರಕಿದ ಸಂದರ್ಭದಲ್ಲಿ  ಮುಸಲ್ಮಾನರು ಪ್ರತ್ಯೇಕ ರಾಜ್ಯ ಬೇಕೆಂದು ಕೂಗಿದಾಗ  ಗಾಂಧೀಜಿಯವರು ಅವರನ್ನು ತಡೆಯಲಿಲ್ಲ, ಮತ್ತು ಪಾಕಿಸ್ತಾನದಲ್ಲಿ  ಹಿಂದೂಗಳ ಮೇಲೆ ದೌರ್ಜನ್ಯ ನಡೆದು ಲಕ್ಷ ಲಕ್ಷ ಮಂದಿ ಸಾವಿಗೀಡಾದಾಗ  ಗಾಂಧೀಜಿಯವರು ದೆಹಲಿಯಲ್ಲಿ ಪ್ರೇಮ ಬೋಧನೆ ಮಾಡುತ್ತಿದ್ದರು, ದೆಹಲಿಯಲ್ಲಿದ್ದ ಎಲ್ಲ ಹಿಂದೂ ದೇವಾಲಯಗಳನ್ನು ಮುಸಲ್ಮಾನರು ನಾಶಪಡಿಸಿ ಮಸೀದಿ ಕಟ್ಟಿಸಿದ್ದು ನಿಜವೆಂದು ಗೊತ್ತಿದ್ದರೂ ಹಿಂದೂ ನಿರಾಶ್ರಿತರು ದೆಹಲಿಯ ಮಸೀದಿಗಳಲ್ಲಿ ತಾತ್ಕಾಲಿಕ ನೆಲೆ ಕಂಡುಕೊಳ್ಳಲು ಪ್ರಯತ್ನಿಸಿದಾಗ  ಅವರು ಅದನ್ನು ತಡೆದರು- ಇತ್ಯಾದಿ ಆರೋಪಗಳಿವೆ.     ೬೯೦ ಪುಟಗಳಿರುವ ಈ ಬೃಹತ್ ಕಾದಂಬರಿಯ ಕನ್ನಡ ಅನುವಾದ ಬಹಳ ಸೊಗಸಾಗಿ ಬಂದಿದೆ. ತಮಿಳು ಭಾಷೆಯ ಕೆಲವು ಪದಗಳನ್ನು ಹಾಗೆಯೇ ಉಳಿಸಿಕೊಂಡು ಅವಕ್ಕೆ ಅಡಿ ಟಿಪ್ಪಣಿ ಕೊಟ್ಟದ್ದು ಕನ್ನಡದ ಓದುಗರಿಗೆ ತಮಿಳು ಸಂಸ್ಕೃತಿಯ ಪರಿಚಯ ಮಾಡಿಕೊಳ್ಳುವಲ್ಲಿ  ಉಪಯುಕ್ತವಾಗಿದೆ.  ತಮಿಳಿನ ಕೆಲವು ಗಾದೆ ಮಾತು- ನುಡಿಕಟ್ಟುಗಳಿಗೆ ಸಮಾನಾರ್ಥಕವಾದ ಅಭಿವ್ಯಕ್ತಿಗಳು ಕನ್ನಡದಲ್ಲಿ ಇಲ್ಲದಿದ್ದರೂ ಅವುಗಳನ್ನು ಅಷ್ಟೇ ಪ್ರಾಸಬದ್ಧವಾಗಿ ರಚಿಸಿ ಕನ್ನಡಕ್ಕೆ ಕೊಡುಗೆಯಾಗಿ ನೀಡಿದ್ದು ಸ್ವಾಗತಾರ್ಹ. ಒಟ್ಟಿನಲ್ಲಿ ಇದು ಬಹಳ ಸೃಜನಶೀಲ ಅನುವಾದ. ********************** ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

ಅಂಕಣ ಸಂಗಾತಿ, ರಹಮತ್ ತರೀಕೆರೆ ಬರೆಯುತ್ತಾರೆ

ಅಂಕಣ ಬರಹ-14 `ಸಣ್ಣ’ಸಂಗತಿ ನರಸಿಂಹಸ್ವಾಮಿಯವರ ಪುಟ್ಟ ಕವಿತೆಯೊಂದಿದೆ-ಹೆಸರು `ಸಣ್ಣಸಂಗತಿ’. ಅದು ಸಾಹಿತ್ಯ ವಿಮರ್ಶೆಯಲ್ಲಿ ಶ್ರೇಷ್ಠ ಕವನವೆಂದೇನೂ ಚರ್ಚೆಗೊಳಗಾಗಿಲ್ಲ. ಆದರೆ ಮತ್ತೆಮತ್ತೆ ಕಾಡುತ್ತದೆ. ಅದರ ವಸ್ತು ತಾಯೊಬ್ಬಳ ದುಡಿತ. ಅಲ್ಲೊಂದು ಸನ್ನಿವೇಶವಿದೆ: ನಡುರಾತ್ರಿ. ಕುಟುಂಬದ ಸಮಸ್ತ ಸದಸ್ಯರೂ ಗಾಢನಿದ್ದೆಯಲ್ಲಿದ್ದಾರೆ. ಅವರಲ್ಲಿ ಎಳೆಗೂಸಿನ ತಾಯಿಯೂ ಸೇರಿದ್ದಾಳೆ. ಆಕೆಯ ಮಂಚದ ಪಕ್ಕದಲ್ಲಿರುವ ತೊಟ್ಟಿಲಲ್ಲಿ ಕೂಸಿದೆ. ಅದು ಗಾಳಿಯಲ್ಲಿ ಕಾಲು ಅಲುಗಿಸುತ್ತ ಹೊದಿಕೆಯನ್ನು ಕಿತ್ತೆಸೆಯುತ್ತಿದೆ. ಎಲ್ಲರಂತೆ ಆಕೆಯೂ ನಿದ್ದೆಯಲ್ಲಿ ಮುಳುಗಿರುವಳು. ಆದರೆ ಅವಳ ಕೈ ಮಗುವಿನ ಹೊದಿಕೆಯನ್ನು ಸರಿಪಡಿಸುತ್ತಿದೆ. `ನಿದ್ದೆ ಎಚ್ಚರಗಳಲಿ ಪೊರೆವ ಕೈ’ಯನ್ನು ತನ್ನ ಕಂದನಿಗಾಗಿ ದುಡಿಯಲು ಬಿಟ್ಟಿರುವ ಈ ತಾಯ್‍ದುಡಿತದ ಪ್ರೇರಣೆ ಯಾವುದು? ಲೋಕದ ಸಮಸ್ತ ತಾಯಂದಿರಲ್ಲೂ ಯುಗಾಂತರಗಳಿಂದ ಸಂತಾನ ಕಾಪಿಡಲು ನಿರತವಾಗಿರುವ ಸುಪ್ತ ಕಾಳಜಿಯೇ? ಲೋಕದಲ್ಲಿ ಸಂಭವಿಸುವ ಯುದ್ಧ, ಪ್ರವಾಹ, ಭೂಕಂಪ, ವಿಮಾನಾಪಘಾತ, ರಾಜಕೀಯ ಬದಲಾವಣೆ, ಸುನಾಮಿ ಮುಂತಾದ ನಿಸರ್ಗಕೃತ ಹಾಗೂ ಮಾನವ ನಿರ್ಮಿತ ವಿದ್ಯಮಾನಗಳನ್ನೆಲ್ಲ `ಬೃಹತ್’ ಎನ್ನುವುದಾದರೆ, ಅವುಗಳ ಮುಂದೆ ಈ ಸಂಗತಿ `ಸಣ್ಣ’ದು. ಆದರೆ ನಿಜವಾಗಿ ಸಣ್ಣದೇ? ಇದು ಕವಿತೆ ಹುಟ್ಟಿಸುತ್ತಿರುವ ಬೆರಗು ಮತ್ತು ಪ್ರಶ್ನೆ. ಇಂತಹ `ಸಣ್ಣ’ಸಂಗತಿಗಳನ್ನು ಗಮನಿಸಲಾಗದೆ ಹುಟ್ಟಿರುವ ದೊಡ್ಡ ಬರೆಹಗಳು ಲೋಕದಲ್ಲಿ ಬಹುಶಃ ಇಲ್ಲ. ಟಾಲ್‍ಸ್ಟಾಯ್, ಕುವೆಂಪು, ವೈಕಂ, ಪ್ರೇಮಚಂದ್, ದೇವನೂರ ಇವರ ಬರೆಹ ಶ್ರೇಷ್ಠ ಮತ್ತು ಮಾನವೀಯ ಆಗಿರುವುದು ಇಂತಹ `ಕಿರು’ ಸಂಗತಿಗಳನ್ನು ಒಳಗೊಳ್ಳುವುದರಿಂದ; ಓದುಗರ ಸಂವೇದನೆಯನ್ನು ಸೂಕ್ಷ್ಮವಾಗಿಸುವ ಪರಿಯಿಂದ.`ಮಲೆಗಳಲ್ಲಿ ಮದುಮಗಳು’ ಕಾದಂಬರಿಯ ಆರಂಭದಲ್ಲಿ ಬರುವ ಪ್ರಸ್ತಾವನ ರೂಪದ ಹೇಳಿಕೆ ನೆನಪಾಗುತ್ತಿದೆ: `ಇಲ್ಲಿ ಯಾರೂ ಮುಖ್ಯರಲ್ಲ. ಯಾರೂ ಅಮುಖ್ಯರಲ್ಲ, ಯಾವುದೂ ಯಃಕಶ್ಚಿತವಲ್ಲ; ಇಲ್ಲಿ ಎಲ್ಲಕ್ಕೂ ಇದೆ ಅರ್ಥ; ಯಾವುದೂ ಅಲ್ಲ ವ್ಯರ್ಥ’. ಇದು ಲೋಕದ ಸಮಸ್ತವನ್ನು ಹಿರಿದು ಕಿರಿದೆನ್ನದೆ ಸಮಾನ ಮಹತ್ವದಿಂದ ನೋಡುವ ತತ್ವ; ಇನ್ನೊಂದು ಬಗೆಯಲ್ಲಿ ಸಮಾಜವಾದಿ ದರ್ಶನ ಕೂಡ. ಅಂತಸ್ತು ಅಧಿಕಾರ ಜಾತಿ ಸಂಪತ್ತು ಇತ್ಯಾದಿ ಕಾರಣಗಳಿಂದ ಕೆಲವರನ್ನು ಗಣ್ಯರೆಂದೂ ಕೆಲವರನ್ನು ಸಣ್ಣವರೆಂದೂ ತಾರತಮ್ಯ ಮಾಡುವ ಮನೋಭಾವ ಸಮಾಜದಲ್ಲಿದೆ. ಈ ಮನೋಭಾವಕ್ಕೆ ಕೆಲವು ಸಂಗತಿ `ದೊಡ್ಡ’ `ಮಹತ್ವ’ ಅನಿಸಿದರೆ, ಕೆಲವು `ಸಣ್ಣ’ `ಕ್ಷುದ್ರ’ ಎನಿಸುತ್ತವೆ. ಈ ತಾರತಮ್ಯವನ್ನು ಮೀರಿ ಲೋಕವನ್ನು ಗ್ರಹಿಸಲು ಸಾಧ್ಯವಾದರೆ, ಹೊಸನೋಟಗಳು ಕಾಣಬಹುದು. ಲೋಕವು ತನ್ನ ಪ್ರತಿಷ್ಠಿತ ಧೋರಣೆಯಿಂದ ನೋಡಲು ನಿರಾಕರಿಸಿದ, ನೂರಾರು ಜೀವಂತ ಸನ್ನಿವೇಶಗಳು ಗೋಚರಿಸಬಹುದು. ಆಗ ಅವನ್ನು ಪ್ರೀತಿ ಅಚ್ಚರಿ ಕುತೂಹಲಗಳಿಂದ ನೋಡುತ್ತ ಅಲ್ಲಿರುವ ಚೈತನ್ಯ ಗುರುತಿಸಲು ಸಾಧ್ಯವಾಗುತ್ತದೆ. ಅವು ನಮ್ಮ ಅರಿವು ಮತ್ತು ಸಂವೇದನೆಗಳನ್ನು ನಮಗೆ ಅರಿವಿಲ್ಲದೆಯೇ ಬದಲಿಸಬಲ್ಲವು. ಕುವೆಂಪು ದೊರೆ ರಾಮನ ಮೇಲೆ `ಮಹಾಕಾವ್ಯ’ ಬರೆದರು. ಈ ಬಗ್ಗೆ ಅವರಿಗೆ ಸ್ವಯಂ ಅಭಿಮಾನವಿತ್ತು. ಆದರೆ ವಾಸ್ತವವಾಗಿ ಅವರು ನಮ್ಮ ಮಹತ್ವದ ಲೇಖಕರಾಗಿರುವುದು `ಸಾಮಾನ್ಯ’ರೆಂದು ಕರೆಯುವ, ಚರಿತ್ರೆಯಿಲ್ಲದ ಮನುಷ್ಯರನ್ನು ಕುರಿತು ಬರೆದ ಪರ್ಯಾಯ ಚರಿತ್ರೆಯಿಂದ; ಗೊಬ್ಬರ ಪುಟ್ಟಹಕ್ಕಿ ಹೀರೇಹೂವು ಇತ್ಯಾದಿ ವಸ್ತುಗಳ ಮೇಲೆ ಬರೆದ ಕವಿತೆಗಳಿಂದ. ಮಲತಾಯಿಯ ಕಾಟಕ್ಕೆ ಸಿಲುಕಿದ ಪುಟ್ಟ ಹುಡುಗಿ, ಮನೆಗೆ ಬಾರದ ದನ ಹುಡುಕುತ್ತ ಕತ್ತಲಲ್ಲಿ ಹೋಗಿ ಸಂಕಟಪಡುವ `ನಾಗಿ’ ಕವನವನ್ನು ಓದುವಾಗ, ಈಗಲೂ ನನ್ನ ಕಣ್ಣಂಚಿಗೆ ನೀರು ಬಂದು ನಿಲ್ಲುತ್ತವೆ. ನಾಯಿ ಕೋಳಿ ಮಕ್ಕಳು ಹೆಂಗಸರು ದಲಿತರು ಅವರ ಗದ್ಯಕಥನದ ಪ್ರಮುಖ ಪಾತ್ರಗಳು; ಹೆಚ್ಚಿನವರು `ಯಾರೂ ಅರಿಯದ ವೀರ’ರು. ಇದು ಅವರ ಕತೆಯೊಂದರ ಹೆಸರು ಕೂಡ. `ಇಂದಿರಾಬಾಯಿ’ `ಮರಳಿಮಣ್ಣಿಗೆ’ `ಒಡಲಾಳ’ ಇವೆಲ್ಲ ಯಾರೂ ಅರಿಯದ ವೀರರ ಮೇಲೆ ಹುಟ್ಟಿದ ಕಥನಗಳೇ. ಕೆಎಸ್‍ನ ಅವರ ಕವನದ ತಾಯಿ ಕೂಡ ಇಂತಹ ಒಬ್ಬ ವೀರಳೇ. ಲೋಕದೃಷ್ಟಿಯಲ್ಲಿ ಬೃಹತ್ ಮಹತ್ ಎನ್ನಲಾಗುವ ಸಂಗತಿಗಳನ್ನು ಗಮನಿಸುವುದು ದೋಷವಲ್ಲ. ಆದರೆ ಅದೊಂದೇ ನೋಡುಗರ ಚಿಂತನೆಯನ್ನೊ ಸೃಷ್ಟಿಯಾದ ಕಲೆಯನ್ನೊ ಮಹತ್ವಗೊಳಿಸುವುದಿಲ್ಲ; `ಸಾಮಾನ್ಯ’ ಎನಿಸಿಕೊಂಡಿದ್ದನ್ನು ನೋಡುವುದರ, ಅದರ ಬಗ್ಗೆ ಚಿಂತಿಸುವುದರ ಅನುಭವವೇ ಬೇರೆ. `ಭವ್ಯತೆ’ ಪರಿಕಲ್ಪನೆಯ ಮೇಲೆ ಚರ್ಚಿಸುತ್ತ ಚಿಂತಕ ಬ್ರಾಡ್ಲೆ, ಆಗಸಕ್ಕೆ ಚಾಚಿದ ಚರ್ಚಿನ ಶಿಖರ ಮಾತ್ರವಲ್ಲ, ತನ್ನ ಮರಿಯನ್ನು ರಕ್ಷಿಸಿಕೊಳ್ಳಲು ತಾಯಿಹಕ್ಕಿ ನಾಯಿಯೊಂದಿಗೆ ಮಾಡುವ ಹೋರಾಟವೂ ಭವ್ಯವೆಂದು ಕರೆಯುತ್ತಾನೆ. ಕನ್ನಡದ ಎಲ್ಲ ಸಂವೇದನಶೀಲ ಲೇಖಕರಿಗೆ ಈ ಸಂಗತಿ ತಿಳಿದಿತ್ತು. ಈ ಸಂಗತಿಯು ಬರೆಹಕ್ಕೆ ಸಂಬಂಧಿಸಿದ ವಿಷಯ ಮಾತ್ರವಲ್ಲ. ದಾರ್ಶನಿಕರಿಗೂ ರಾಜಕೀಯ ನಾಯಕರಿಗೂ ಸಂಬಂಧಪಟ್ಟಿದ್ದು. ಬುದ್ಧ ಲೋಕಗುರು ಆಗಿದ್ದು, ಸಾಮ್ರಾಟರ ಜತೆ ಮಾಡಿದ ಸಂವಾದದಿಂದಲ್ಲ. ಮಗುಸತ್ತ ತಾಯೊಬ್ಬಳ ದುಗುಡವನ್ನು ಸಾವಿಲ್ಲದ ಮನೆಯ ಸಾಸಿವೆಯನ್ನು ತರಲು ಹೇಳುವ ಮೂಲಕ; ಚಾಂಡಾಲಕನ್ಯೆಯ ಕೈನೀರನ್ನು ಕುಡಿದೊ ವೇಶ್ಯೆಯೊಬ್ಬಳ ಆತಿಥ್ಯ ಸ್ವೀಕರಿಸಿ ಅವರಲ್ಲಿ ಹೊಸಬಾಳಿನ ಭರವಸೆ ಮೂಡಿಸುವ ಮೂಲಕ. ಅವನು ರೋಗಿ, ಶವ, ಭಿಕ್ಷುಕರನ್ನು ಕಂಡು ಲೋಕದ ದುಃಖಕ್ಕೆ ಪರಿಹಾರ ಕಾಣಲು ಮನೆಬಿಟ್ಟು ಹೋಗಿದ್ದು, ಕಟ್ಟುಕತೆ ಇರಬಹುದು; ಆದರೆ ಇದು ಪರೋಕ್ಷವಾಗಿ ಬುದ್ಧನ ನೋಟದ ವಿಶಿಷ್ಟತೆ ಮತ್ತು ಹೃದಯವಂತಿಕೆಯನ್ನು ಕುರಿತು ಜನರ ಕಲ್ಪನೆಯನ್ನು ಸಹ ಸೂಚಿಸುತ್ತಿದೆ. ಮಹತ್ತೆನ್ನುವುದು ಕಿರಿದುಗಳಿಂದಲೇ ರೂಪುಗೊಳ್ಳುತ್ತದೆ ಎಂಬ ಅರಿವು ಇಲ್ಲಿನದು. ಕೀಳಿಂಗೆ ಹಯನು ಕರೆಯುತ್ತದೆ ಎಂದು ಶರಣರು ರೂಪಕಾತ್ಮಕವಾಗಿ ಇದೇ ತಥ್ಯವನ್ನು ಹೇಳಿದರು. ಗಾಂಧಿಯವರ ನೋಟ ಮತ್ತು ಕ್ರಿಯೆಗಳಲ್ಲೂ ಈ ತಥ್ಯವಿತ್ತು. ಉಪ್ಪು ಚರಕಗಳು ಲೋಕದ ಕಣ್ಣಲ್ಲಿ `ಸಣ್ಣ’ ವಸ್ತುಗಳು. ಆದರೆ ಅವುಗಳ ಮೂಲಕ ದೇಶದಲ್ಲಿ ಹೊಸ ರಾಜಕೀಯ-ಸಾಮಾಜಿಕ ಪ್ರಜ್ಞೆಯನ್ನು ಅವರು ಕಟ್ಟಿದರು; ರಾಜಕಾರಣವನ್ನು ಆಧ್ಯಾತ್ಮೀಕರಿಸಿ ಸಂಚಲನ ಮೂಡಿಸಿದರು. `ಸಣ್ಣ’ ವಿಷಯಗಳಿಗೂ ಗಮನಕೊಡುವ ಅವರ ಗುಣ ಅಟೆನ್‍ಬರೊ ಸಿನಿಮಾದಲ್ಲಿಯೂ ಇದೆ. ಅದು ನೆಹರೂ ಹಾಗೂ ಪಟೇಲರು ರಾಜಕೀಯ ಮಹತ್ವದ ಸಮಸ್ಯೆಯನ್ನು ಚರ್ಚಿಸಲು ಆಶ್ರಮಕ್ಕೆ ಬಂದಿರುವ ಸನ್ನಿವೇಶ. ಗಾಂಧೀಜಿ ಅವರಿಬ್ಬರ ಜತೆ ಮಾಡುತ್ತಿದ್ದ ಚರ್ಚೆಯನ್ನು ತಟ್ಟನೆ ನಿಲ್ಲಿಸಿ, ಮುರಿದ ಕಾಲಿನ ಮೇಕೆಯೊಂದರ ಶುಶ್ರೂಶೆಗೆ ತೊಡಗಿಬಿಡುತ್ತಾರೆ. ಈ ಘಟನೆ ನಾಟಕೀಯವಾಗಿದೆ ಮತ್ತು ಮಾರ್ಮಿಕವಾಗಿದೆ. ನರಸಿಂಹಸ್ವಾಮಿ ಕವನದಲ್ಲಿ ಹಾಲೂಡಿಸುವ ತಾಯಿ ಕೂಸಿನ ಕಾಳಜಿ ಮಾಡಿದರೆ, ಇಲ್ಲಿ ಗಾಂಧಿ ತನಗೆ ಹಾಲೂಡುವ ಪ್ರಾಣಿಯ ಕಾಳಜಿ ಮಾಡುವರು. ದೇಶ ನಡೆಸುವ ಹೊಣೆ ಹೊರಲು ಸಿದ್ಧವಾಗುತ್ತಿರುವ ಇಬ್ಬರು ನಾಯಕರಿಗೆ ದೇಶಕಟ್ಟುವ ಪರಿಯನ್ನು ಈ ಮೂಲಕ ಸೂಚಿಸುವರು. `ಚಿಕ್ಕ’ ಸಂಗತಿಗಳಿಗೆ ಗಮನ ಹರಿಸುವುದು ಡೆಮಾಕ್ರಸಿಯ ತಳತತ್ವವೂ ಹೌದು. ಸ್ಮಾಲ್ `ಬೂಟಿಫುಲ್’ ಮಾತ್ರವಲ್ಲ, ಗ್ರೇಟ್ ಕೂಡ. `ಸಣ್ಣ’ ಶಬ್ದವು ಸಣ್ಣತನದಲ್ಲಿ ನೇತ್ಯಾತ್ಮಕವಾಗಿರಬಹುದು. ಆದರದು ವಿರಾಟ್ ತತ್ವದರ್ಶನದ ಜೀವಾಳ. ನರಸಿಂಹಸ್ವಾಮಿ ಕವನದ ತಾಯ ಚಿತ್ರವು ನನ್ನನ್ನು ಕಾಡುತ್ತಿರಲು ಬಾಲ್ಯದ ನೆನಪುಗಳೂ ಕಾರಣವಿರಬೇಕು. ರಾತ್ರಿ ಊಟದ ಹೊತ್ತಲ್ಲಿ ಅಮ್ಮ ನಮ್ಮನ್ನು ಎದುರು ಕೂರಿಸಿಕೊಂಡು, ಸಂಗೀತಗೋಷ್ಠಿಯಲ್ಲಿ ಕಲಾವಿದನು ಹಲವು ವಾದ್ಯಗಳ ನಡುವೆ ಕೂತಂತೆ ಅಡುಗೆಯ ಪಾತ್ರೆಗಳನ್ನು ಸುತ್ತ ಇಟ್ಟುಕೊಂಡು, ಎಲ್ಲರ ತಟ್ಟೆಗಳ ಮೇಲೆ ಹಕ್ಕಿಗಣ್ಣನ್ನಿಟ್ಟು, ನಮ್ಮ ಹಸಿವು ಇಷ್ಟಾನಿಷ್ಟಗಳನ್ನು ಗಮನಿಸಿ ಬಡಿಸುತ್ತ, ತಾನೂ ಬಡಿಸಿಕೊಂಡು ಉಣ್ಣುತ್ತಿದ್ದಳು. ನಾವೆಲ್ಲ ಮಲಗಿದ ಬಳಿಕವೂ ಎಚ್ಚರವಾಗಿದ್ದು ಹೊದಿಕೆ ಸರಿಪಡಿಸುತ್ತ, ಸರಿದ ದಿಂಬನ್ನು ತಲೆಗೆ ಕೊಡುತ್ತ, ಹೋಗಿಬರುವ ತಿಗಣೆಗಳನ್ನು ಹೊಸಕಿ ಹಾಕುತ್ತ, ನಿಶಾಚರಿಯಂತೆ ವರ್ತಿಸುತ್ತಿದ್ದಳು. ನಿತ್ಯವೂ ಸಂಭವಿಸುತ್ತಿದ್ದ ಈ ಬಡಿಸುವ ಮತ್ತು ಮಲಗಿಸುತ್ತಿದ್ದ ಪರಿ ಎಷ್ಟು ಜೀವಪರವಾಗಿತ್ತು ಎಂದು ಈಗ ಹೊಳೆಯುತ್ತಿದೆ. ಲೋಕದ ಅದೆಷ್ಟು ಮನೆಗಳಲ್ಲಿ ಇಂತಹ ತಾಯ್‍ಜೀವಗಳು ಉಳಿದವರ ಹದುಳಕ್ಕೆ ದುಡಿಯುತ್ತಿವೆಯೊ? ತಾಯ್ತನದ ಈ ಕಾಳಜಿ ತಂದೆ, ಮಡದಿ, ಗಂಡ, ಸ್ನೇಹಿತರು ಕೂಡ ಮಾಡಬಲ್ಲರು. ಲೋಕಚಿಂತಕರ ಇಂತಹದೇ ಕಾಳಜಿ, ಚಿಂತನೆ ಮತ್ತು ಕ್ರಿಯೆಗಳು ಸಮಾಜವನ್ನು ಕಟ್ಟಿವೆ. ಕುದ್ಮಲ್ ರಂಗರಾವ್, ಗೋದಾವರಿ ಪುರುಳೇಕರ್, ಜ್ಯೋತಿಬಾ, ಅಂಬೇಡ್ಕರ್, ಕುವೆಂಪು, ನಾರಾಯಣಗುರು ಇವರು ಸಮಾಜಕ್ಕೆ ನೆಮ್ಮದಿಯ ಬದುಕನ್ನು ರೂಪಿಸಲು ಹೆಣಗಿದವರು. ಅದಕ್ಕಾಗಿ ಲೋಕದಿಂದ ಕಷ್ಟ ಅಪಮಾನ ಎದುರಿಸಿದವರು. ಅವರ ತಾಯ್ತನ ಹೆತ್ತಮ್ಮನಿಗಿಂತ ಹಿರಿದು. ತನ್ನ ಮಕ್ಕಳಿಗೆ ತಾಯಿಯಾಗುವುದಕ್ಕಿಂತ ಲೋಕದ ಮಕ್ಕಳಿಗೆ ತಾಯಿಯಾಗುವುದು `ದೊಡ್ಡ’ ಸಂಗತಿ. ಗಾತ್ರಸೂಚಕವಾದ `ಸಣ್ಣ’ `ದೊಡ್ಡ’ ಎಂಬ ಈ ಎದುರಾಳಿ ಅಂಶಗಳು ಒಂದು ಹಂತದವರೆಗೆ ವಾಸ್ತವ. ಆದರೆ ಸಣ್ಣದು ದೊಡ್ಡದಾಗುವ ದೊಡ್ಡದು ಸಣ್ಣದಾಗುವ, ಎರಡೂ ಸೇರಿ ಮತ್ತೊಂದಾಗುವ ಪ್ರಕ್ರಿಯೆ ಲೋಕದಲ್ಲಿ ನಡೆಯುತ್ತಲೇ ಇರುತ್ತದೆ. ಸಮತೆಯ ದರ್ಶನವುಳ್ಳ ಎಲ್ಲರೂ ತಮ್ಮ ಆಲೋಚನೆ ಮತ್ತು ಕಾರ್ಯದ ಮುಖೇನ ಇದನ್ನು ಕಾಣಿಸುತ್ತ ಬಂದಿದ್ದಾರೆ. ಇಂತಹ ಗಹನ ದರ್ಶನವನ್ನು ನರಸಿಂಹಸ್ವಾಮಿ ಕವನದ ತಾಯಿ ತನ್ನ ಸಹಜ ದೈನಿಕ ಚಟುವಟಿಕೆಯ ಮೂಲಕ ಪ್ರಕಟಿಸುತ್ತಿರುವಳು. ಹೀಗಾಗಿಯೇ ಅವಳ ಹೊದಿಕೆ ಸರಿಪಡಿಸುವಿಕೆ, ಲೌಕಿಕವಾಗಿದ್ದರೂ ಲೋಕೋತ್ತರ ಕಾಯಕವೂ ಆಗಿದೆ. ಈ ಕ್ರಿಯೆ ತನ್ನ ಪ್ರಮಾಣದಲ್ಲಿ ಸಾಮಾನ್ಯ ಎನಿಸುತ್ತಿದ್ದರೂ ಪರಿಣಾಮದಲ್ಲಿ ಅಸಾಮಾನ್ಯ. ಆಗಸದಲ್ಲಿ ರೂಪುಗೊಂಡ ಕಾರ್ಮುಗಿಲು ಮಳೆಸುರಿಸಿ, ಆ ನೀರನ್ನು ನೆಲವು ಕುಡಿದು, ಅದು ಬಿಸಿಲಿಗೆ ಆವಿಯಾಗಿ ಗಾಳಿಯಲ್ಲಿ ಸೇರಿ, ತಂಪುಕ್ಷಣದಲ್ಲಿ ಜಲಬಿಂದುವಾಗಿ ನೆಲಕ್ಕಿಳಿಯುತ್ತದೆ. ನೀರು ಮಾಡುವ ದ್ಯಾವಾಪೃಥಿವಿಯ ಈ ವಿರಾಟ್ ಸಂಚಾರಕಥನವನ್ನು, ಹುಲ್ಲಿನೆಸಳ ತುದಿಯಲ್ಲಿ ವಜ್ರದ ಹರಳಿನಂತೆ ಕೂತಿರುವ ಇಬ್ಬನಿಯ ಪುಟ್ಟಹನಿ ಹೇಳುತ್ತಿರುತ್ತದೆ. ಇದೇನು ಸಣ್ಣ ಸಂಗತಿಯೇ? ********************************************** ರಹಮತ್ ತರಿಕೆರೆಯವರು- ಕನ್ನಡದ ಗಮನಾರ್ಹ ಲೇಖಕ. ಹಂಪಿ ವಿಶ್ವವಿದ್ಯಾಲಯದ ಪ್ರೋಫೆಸರ್. ನಾಡಿನ ಸಂಸ್ಕೃತಿ, ಸೌಹಾರ್ದತೆಯ ಬೇರುಗಳ ಜಾಡು ಹಿಡಿದು, ಆಯಾ ಊರುಗಳಿಗೆ ಹೋಗಿ, ಮಾಹಿತಿ ಹಾಕಿ, ಅಲ್ಲಿನ ಜನರ ಜೊತೆ ಬೆರೆತು, ಸಂಶೋಧನಾ ಲೇಖನಗಳನ್ನು ಬರೆದವರು.‌ಕರ್ನಾಟಕದ ಸಂಗೀತಗಾರರು ಹಾಗೂ ಅವರು ದೇಶದ ಇತರೆ ಭಾಗಗಳಲ್ಲಿ ನೆಲೆಸಿದವರ ಬಗ್ಗೆ ಹುಡುಕಾಡಿ ಬರೆದವರು. ಅವರ ನಿರೂಪಣಾ ಶೈಲಿ ಅತ್ಯಂತ ಆಕರ್ಷಕ. ಮನಮುಟ್ಟುವಂತೆ ಬರೆಯುವ ರಹಮತ್ ತರೀಕೆರೆ ಕನ್ನಡದ ,ಬಹುತ್ವದ ,ಸೌಹಾರ್ದತೆಯ ಪ್ರತೀಕವೂ ಆಗಿದ್ದಾರೆ

Read Post »

ಕಾವ್ಯಯಾನ

ಗಝಲ್

ಗಝಲ್ ರತ್ನರಾಯ ಮಲ್ಲ ಅಕ್ಕಸಾಲಿಗನಲ್ಲಿ ಕಾಲ್ಗೆಜ್ಜೆ ತಂದಿರುವೆನು ಪ್ರೀತಿಯಿಂದಬಲಗಾಲು ಮುಂದೆಯಿಡು ತೊಡಿಸುವೆನು ಪ್ರೀತಿಯಿಂದ ಮಯೂರವು ವಿಹರಿಸಿದಂತಾಗುತಿದೆ ಈ ಹೃದಯದಲ್ಲಿಹಂಸದ ನಡಿಗೆಯನು ಪ್ರೀತಿಸುತಿರುವೆನು ಪ್ರೀತಿಯಿಂದ ಹಕ್ಕಿಗಳ ಕಲರವವು ಆಲಂಗಿಸುತಿದೆ ಈ ಮೈ-ಮನಗಳನ್ನುಶಕುಂತಲೆಯ ನಾಟ್ಯದಿ ಮೈ ಮರೆತಿರುವೆನು ಪ್ರೀತಿಯಿಂದ ಗೆಜ್ಜೆ ಎದೆ ಬಡಿತದೊಂದಿಗೆ ಪ್ರೇಮ ರಾಗವ ನುಡಿಸುತಿದೆನಿದ್ದೆ ಮರೆತು ನಿನ್ನನ್ನೆ ಕನವರಿಸುತಿರುವೆನು ಪ್ರೀತಿಯಿಂದ ‘ಮಲ್ಲಿ’ ನಿನ್ನ ಹೆಜ್ಜೆಯಲ್ಲಿ ಗೆಜ್ಜೆಯನು ಹುಡುಕುತಿರುವನುನಿನ್ನ ಪಾದಗಳನ್ನು ಅಲಂಕರಿಸುತಿರುವೆನು ಪ್ರೀತಿಯಿಂದ **********************************

ಗಝಲ್ Read Post »

ಕಾವ್ಯಯಾನ

ಬಾಲ್ಯ

ಕವಿತೆ ಬಾಲ್ಯ ತಿಲಕ ನಾಗರಾಜ್ ಹಿರಿಯಡಕ ಅರೆ! ಎಷ್ಟು ಚೆನ್ನಾಗಿತ್ತಲ್ಲ?ಅಲ್ಲಿ ಯಾವ ನೋವಿನಹಂಗಿರಲಿಲ್ಲ….ಚಿಂತೆಗಳ ಬರೆಯಿರಲಿಲ್ಲಮುದವೀಯುತ್ತಿದ್ದವಲ್ಲಕಾಡು ಮೇಡುಗಳ ಅಲೆದಾಟಗದ್ದೆ ಬಯಲುಗಳ ಓಡಾಟ…ಲಗೋರಿ ಕಣ್ಣಾಮುಚ್ಚಾಲೆಚಿನ್ನಿದಾಂಡು ಉಯ್ಯಾಲೆಕ್ರಿಕೇಟು ಕುಂಟೆಬಿಲ್ಲೆಆಟಗಳಾಡಿ ರಾತ್ರಿಯಲ್ಲಿಕಾಲಿಗೆ ಚುಚ್ಚಿದ ಮುಳ್ಳುಗಳನೋವಿನ ಜೊತೆಹಿರಿಯರ ಬೈಗುಳದ ಜೋಗುಳಒಂದಷ್ಟು ಹಾಯಾದ ನಿದ್ದೆಮರವೇರಿ ಕೊಯ್ದಮಾವಿನ ಕಾಯಿಗಳಬಚ್ಚಿಟ್ಟು ಹಣ್ಣಾಗಿಸಿ ತಿಂದಸ್ವಾದ ನಾಲಗೆಯಲ್ಲಿ ಸದಾ ಅಮರಹಚ್ಚಿಟ್ಟ ಚಿಮಣಿ ದೀಪದಆಚೆಗೆ ಬೀಡಿ ಎಲೆಗಳ ಸುರುಳಿಸುತ್ತುತ್ತಿದ್ದ ಅಮ್ಮನ ಬೆರಳುಗಳುಈಚೆಗೆ ಪುಸ್ತಕಗಳ ಮೇಲೆಕಣ್ಣಾಡಿಸುತ್ತಿದ್ದ ನಾವುಗಳುಒಮ್ಮೊಮ್ಮೆ ಬೇಸರೆನಿಸಿದಾಗಪಠ್ಯ ಪುಸ್ತಕಗಳ ನಡುವೆಇರಿಸಿ ಓದುತ್ತಿದ್ದ ಕತೆ ಪುಸ್ತಕಗಳಮುಖಾಂತರ ಕಲ್ಪನಾ ಲೋಕದಲ್ಲಿಒಂದು ಸಣ್ಣ ವಿಹಾರ..ಮರೆಯಲಾಗದ್ದು, ಮರಳಿ ಬಾರದ್ದುಎಷ್ಟು ಚೆನ್ನಾಗಿತ್ತಲ್ಲ ಬಾಲ್ಯ? ***********************

ಬಾಲ್ಯ Read Post »

ಇತರೆ, ಲಹರಿ

ಪ್ರತಿಮೆಯೂ ಕನ್ನಡಿಯೂ..

ಸ್ವಗತ ಪ್ರತಿಮೆಯೂ ಕನ್ನಡಿಯೂ.. ಚಂದ್ರಪ್ರಭ.ಬಿ. ಪ್ರತಿಮೆಯೂ ಕನ್ನಡಿಯೂ “ತೋರಾ ಮನ ದರಪನ ಕೆಹಲಾಯೆಭಲೆ ಬುರೆ ಸಾರೆ ಕರಮೊಂ ಕೊ ದೇಖೆ ಔರ ದಿಖಾಯೆ..………….. ………… ……….. …………… ………… ಸುಖ ಕಿ ಕಲಿಯಾಂ ದುಃಖ ಕಿ ಕಾಟೇಂ ಮನ ಸಬ್ ಕಾ ಆಧಾರ / ಮನ ಸೆ ಕೋಯಿ ಬಾತ ಛುಪೆ ನಾ ಮನ ಕೆ ನೈನ ಹಜಾರ/ ಜಗ ಸೆ ಚಾಹೆ ಭಾಗ ಲೆ ಕೋಯಿ ಮನ ಸೆ ಭಾಗ ನ ಪಾಯೆ…..” “ಕಾಜಲ್” ಹಿಂದಿ ಸಿನಿಮಾ(೧೯೬೫) ದಲ್ಲಿ ಆಶಾ ಭೋಸ್ಲೆ ಹಾಡಿದ ಕೃಷ್ಣ ಭಜನೆ ಸಾಗುವುದು ಹೀಗೆ, ಸಾಹಿತ್ಯ ಸಾಹಿರ್ ಲುಧಿಯಾನ್ವಿ.ಮೀನಾಕುಮಾರಿ ಎಂಬ ಅಮರ ತಾರೆಯ ನಟನೆಯಲ್ಲಿ ಮೂಡಿ ಬಂದ ಅದ್ಭುತ..ಅಮರ ಗೀತೆ.‘ಮನುಜ ತನ್ನ ಮನಸ್ಸಿನಿಂದ ತಾನು ಓಡಿ ಹೋಗಲಾರ.. ಹೋಗಲಾಗದು’ ಎಂಬುದು ಕಟುವಾಸ್ತವ, ಮತ್ತದು ತುಂಬ ದೊಡ್ಡ ಸಂಗತಿ. ಚಲನಚಿತ್ರ ಗೀತೆಯೊಂದರಲ್ಲಿ ಇಂಥ ಲೋಕೋತ್ತರ ಸತ್ಯವನ್ನು ಹಿಡಿದಿಟ್ಟ ರೀತಿ ಕೂಡಾ ಅನನ್ಯ. ಕನ್ನಡದ ಸಂತ ಕವಿ ಸರ್ಪಭೂಷಣ ಶಿವಯೋಗಿ ಯ ಒಂದು ಜನಪ್ರಿಯ ತತ್ವ ಪದವೊಂದು ಇದನ್ನೇ ಇನ್ನೂ ವಿವರವಾಗಿ ಬಣ್ಣಿಸುತ್ತ ಸಾಗುತ್ತದೆ. “ಬಿಡು ಬಾಹ್ಯದೊಳು ಡಂಭವಮಾನಸದೊಳು ಎಡೆ ಬಿಡದಿರು ಶಂಭುವ/ಮನದೊಳು ವಂಚಿಸಿ ಹೊರಗೆ ನೀ ಕೀರ್ತಿಯಪಡೆದರೆ ಶಿವ ನಿನಗೊಲಿಯನು ಮರುಳೇ// ಜನಕಂಜಿ ನಡಕೊಂಡರೇನುಂಟು ಲೋಕದಿಮನಕಂಜಿ ನಡಕೊಂಬುದೇ ಚಂದ/ಜನರೇನು ಬಲ್ಲರು ಒಳಗಾಗೊ ಕೃತ್ಯವಮನವರಿಯದ ಕಳ್ಳತನವಿಲ್ಲವಲ್ಲ// ಮನದಲಿ ಶಿವ ತಾ ಮನೆ ಮಾಡಿಕೊಂಡಿಹಮನ ಮೆಚ್ಚಿ ನಡೆದರೆ ಶಿವ ತಾ ಮೆಚ್ಚುವ/ಮನಕಂಜಿ ನಡೆಯದೆ ಜನಕಂಜಿ ನಡೆದರೆಮನದಾಣ್ಮ ಗುರುಸಿದ್ಧ ಮರೆಯಾಗೊನಲ್ಲ// ‘ಮುಖ ಮನಸ್ಸಿನ ಕನ್ನಡಿ’ ಇದು ಕನ್ನಡದ ಬಲು ಜನಪ್ರಿಯ ನುಡಿಗಟ್ಟು. ದೇಶ, ಭಾಷೆಗಳ ಹಂಗು ಮೀರಿ ಮುಖ, ಮನಸ್ಸು, ಕನ್ನಡಿ – ಈ ಮೂರೂ ಪದಗಳಿಗಿರುವ ನಂಟನ್ನು ಶೋಧಿಸತೊಡಗಿದರೆ ಬಹು ಆಯಾಮಗಳ, ಮಾನವೀಯ ನೆಲೆಗಟ್ಟಿನ ಅನುಪಮ ಸಂಗತಿಯೊಂದು ಪದರುಪದರಾಗಿ ಬಿಚ್ಚಿಕೊಳ್ಳತೊಡಗುತ್ತದೆ. ಮನದ ಕನ್ನಡಿಯಲ್ಲಿ ತನ್ನ ತಾ ನೋಡಿಕೊಳ್ಳಲು ಅರಿತ ಜೀವಿಯಲ್ಲಿ ಒಂದು ಎಚ್ಚರ, ಒಂದು ಪ್ರಜ್ಞೆ ಸದಾವಕಾಲವೂ ಮೌನವಾಗಿ ಅಷ್ಟೇ ಸಹಜವಾಗಿ ಮೊರೆಯುತ್ತಿರುತ್ತದೆ. ಕನ್ನಡಿಯೆದುರು ಪರದೆ ಎಳೆದಿರುವಲ್ಲಿ ಅವಲೋಕನಕ್ಕೆ ಅವಕಾಶವೆಲ್ಲಿ!? ವೈಯಕ್ತಿಕ ನೆಲೆಯಲ್ಲೇ ಆಗಿರಲಿ ಸಮುದಾಯದ ನೆಲೆಯಲ್ಲೇ ಆಗಿರಲಿ ಪಾರದರ್ಶಕತೆ ಬೀರುವ ಪ್ರಭಾವ ಗಮನಾರ್ಹ. ತತ್ಪರಿಣಾಮವಾಗಿ ಅದರಿಂದ ದೊರಕುವ ಅಂತಿಮ ಫಲಿತಾಂಶವೂ ಅಷ್ಟೇ ಪರಿಣಾಮಕಾರಿ. ಹೀಗಿದ್ದೂ ಪ್ರತಿ ದಿನದ ಪ್ರತಿ ಹೆಜ್ಜೆಯಲ್ಲಿ ಮುಖವಾಡಗಳನ್ನು ಬದಲಾಯಿಸುತ್ತಲೇ ಸಾಗುವುದು ತೀರ ಸಹಜ ಎನ್ನುವ ರೀತಿಯಲ್ಲಿ ಬದುಕು ಸಾಗುವುದು. ನಿಜಕ್ಕೂ ಇದು ವಿಸ್ಮಯದ ಸಂಗತಿ. ನೈಜೀರಿಯನ್ ಕವಿ ಗೇಬ್ರಿಯಲ್ ಒಕಾರ ತನ್ನ “ಒಂದಾನೊಂದು ಕಾಲದಲ್ಲಿ” ಕವಿತೆಯಲ್ಲಿ ಹೇಳುವಂತೆ ಮನೆ, ಆಫೀಸು, ಬೀದಿ, ಸಭೆ ಸಮಾರಂಭ – ಹೀಗೆ ಯಾವುದಕ್ಕೆ ಎಂಥದು ಸೂಕ್ತವೊ ಅಂಥದೊಂದು ಮುಖವಾಡ ಧರಿಸಿ ಮುಗುಳ್ನಗುವೊಂದರಲ್ಲಿ ಅದನ್ನು ಅದ್ದಿ ತೆಗೆದು ಕಾರ್ಯ ಸಾಧಿಸಿಬಿಡುವುದು ನಮಗೆಲ್ಲ ರೂಢಿಯಾಗಿಬಿಟ್ಟಿದೆ. ಹೀಗಾಗಿ ನೈಜವಾದ ನಮ್ಮ ಮೂಲ ಮುಖದ ಅಸ್ತಿತ್ವವೇ ಕಳೆದುಹೋಗುತ್ತಿದೆ. ಇದು ತುಂಬ ಅಪಾಯಕಾರಿ. ಸಾಮಾಜಿಕ, ರಾಜಕೀಯ, ಆರ್ಥಿಕ, ಸಾಂಸ್ಕೃತಿಕ ಎಲ್ಲಾ ಬಗೆಯ ಅರಾಜಕತೆಗೂ ದಾರಿ ಮಾಡಿಕೊಡುವಂಥದು. ಯಾರನ್ನೊ ಮೆಚ್ಚಿಸುವುದಕ್ಕಾಗಿ ಅಲ್ಲ, ಯಾರಿಗೊ ವರದಿ ಒಪ್ಪಿಸುವುದಕಾಗಿ ಅಲ್ಲ. ತನ್ನ ಆತ್ಮಸಾಕ್ಷಿ ಎದುರು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು, ಆತ್ಮಸಾಕ್ಷಿ ಎದುರು ಸ್ವತಃ ಕುಬ್ಜನಾಗದಿರಲು ಮನದ ಕನ್ನಡಿಯಲ್ಲಿ ನೋಡಿಕೊಳ್ಳುತ್ತಾ ಸಾಗುವ ಅಗತ್ಯ ಮನಸ್ಸನ್ನು ಎಡೆಬಿಡದೆ ಸತಾಯಿಸಿದಲ್ಲಿ ಸ್ವಾಸ್ಥ್ಯ ತಂತಾನೇ ಪಸರಿಸತೊಡಗುತ್ತದೆ. ಇದು ಆಮೆ ಗತಿಯಲ್ಲಿ ಸಂಭವಿಸುವ ಬಲು ನಿಧಾನವಾದ ಪ್ರಕ್ರಿಯೆ. ವ್ಯಕ್ತಿಯಿಂದ ಸಮಷ್ಟಿ ವರೆಗೆ ಸಾಗುವ ಸುದೀರ್ಘ ಪಯಣ. ಮನಸ್ಸಿದ್ದಲ್ಲಿ ಮಾರ್ಗ ಇದ್ದೇ ಇದೆಯಲ್ಲವೇ! ************************************

ಪ್ರತಿಮೆಯೂ ಕನ್ನಡಿಯೂ.. Read Post »

You cannot copy content of this page

Scroll to Top