ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಆಹುತಿ

ಕವಿತೆ ಆಹುತಿ ಅನಿಲ ಕಾಮತ ದೇಹ ಹಿಂಡಿಹಿಪ್ಪೆಯಾಗಿಸಿದೆಕಾರಿನಲ್ಲಿ ಬಸ್ಸಿನಲ್ಲಿಹಗಲಲ್ಲಿ ನಸುಕಿನಲ್ಲಿಕಾನನದಲ್ಲಿನೀರವ ಅಹನಿಯಲ್ಲಿ ಬೆಳಕು ಸೀಳುವ ಮುನ್ನಬ್ರೇಕಿಂಗ್ ನ್ಯೂಸ್‌ಗಳಿಗೆಆಹಾರಭುವನ ಸುಂದರಿಸ್ಪರ್ಧೆಯಲ್ಲಿದೇಹ ಸೌಂದರ್ಯದ ಬಗ್ಗೆತೀರ್ಪುಗಾರರತಾರೀಪು ಹೆಣ್ಣು ಭ್ರೂಣಪತ್ತೆ ಮಾಡುವತವಕದಲ್ಲಿಸ್ಕೆನ್ನಿಂಗ್ಮಿಷನ್ ಗಳಿಗೆಪುರುಸೊತ್ತಿಲ್ಲ ನದಿಯ ತಟದಲ್ಲಿರೇಲ್ವೆ ಸೇತುವೆಯಕೆಳಗೆಅರೆಬೆಂದ ಶವವಾಗಿಖಾಕಿಗಳಿಗೆ ಮಹಜರುಮಾಡಲು…. ****************

ಆಹುತಿ Read Post »

ಇತರೆ, ಜೀವನ

ಶಿಕ್ಷಣ ಕ್ಷೇತ್ರ ಮತ್ತು ಎರಡು ದಶಕಗಳ ಪ್ರಯಾಣ

ಅನುಭವ ಶಿಕ್ಷಣ ಕ್ಷೇತ್ರ ಮತ್ತು ಎರಡು ದಶಕಗಳ ಪ್ರಯಾಣ ಮಮತಾ ಅರಸೀಕೆರೆ ಬಯಸಿ ಬಂದದ್ದಲ್ಲ. ಹಂಬಲಿಸಿ ಪಡೆದದ್ದಲ್ಲ. ಒಂದು ಬಗೆಯ ಓರೆ ನೋಟದ ಕಸಿವಿಸಿಯ ಬಿಗುವಿನೊಡನೆ ಅನಿಚ್ಛಾಪೂರ್ವಕವಾಗಿ ಇಲಾಖೆಗೆ ಕಾಲಿಟ್ಟದ್ದು. ನಂತರ ಜರುಗಿದ್ದು ಬರೋಬ್ಬರಿ ಇಪ್ಪತ್ತು ವರ್ಷಗಳ ಅನಿಯಮಿತ ಅಡೆತಡೆಯಿಲ್ಲದ ಪ್ರಯಾಣ. ಇದೇ ಅಕ್ಟೋಬರ್ ೨೫ ಕ್ಕೆ ನಾನು ಶಿಕ್ಷಣ ಇಲಾಖೆಯ ಸದಸ್ಯಳಾಗಿ ಎರಡು ದಶಕಗಳೇ ಆಗುತ್ತಿದೆ. ನನ್ನಮ್ಮ ಕೂಡ ಇದೇ ಇಲಾಖೆಯಲ್ಲಿದ್ದವರು.ಅಪ್ಪ ಅಂಚೆ ಇಲಾಖೆ ಉದ್ಯೋಗಿ.ಅದೇಕೋ ತನ್ನ ಇಲಾಖೆ ಬಗ್ಗೆ ಅಸಡ್ಡೆಯಿದ್ದಬಅಪ್ಪನ ಉದ್ಯೋಗಕ್ಕಿಂತ ಸುಲಭವಾಗಿ ಸರಳವಾಗಿ ನಿರ್ವಹಿಸಬಹುದಾದ ಶಿಕ್ಷಕ ವೃತ್ತಿಯನ್ನೇ ನಾನೂ ಪಡೆಯಲಿ ಅಂತ ಅಮ್ಮ ಹಂಬಲಿಸಿದ್ದು ಅದರಂತೆಯೇ ಆದದ್ದು ಈಗ ಭೂತಕಾಲ. ಇಬ್ಬರಿಗೂ ದೊಡ್ಡ ದೊಡ್ಡ ಆಸೆ ಹಂಬಲಗಳಿಲ್ಲ. ಆದರೆ ನನ್ನ ಆಲೋಚನೆ ಸರಳವಾಗಿರಲಿಲ್ಲ. ಪೂರ್ಣವಾಗಿ ಗ್ರಾಮೀಣ ಪ್ರದೇಶದಲ್ಲಿಯೇ ಓದಿದ ನನಗೆ ಯಾರೂ ಮಾರ್ಗದರ್ಶಕರಿಲ್ಲದ್ದು, ಮುಂದಿನ ಹಂತದ ವಿದ್ಯೆ, ಉದ್ಯೋಗಗಳ ಪರಿಚಯವಿಲ್ಲದ್ದು ಹಿನ್ನಡೆ. ಸಣ್ಣಪುಟ್ಟ ಅವಕಾಶದಲ್ಲಿಯೇ ತುಂಬಾ ಪುಸ್ತಕಗಳನ್ನು ಓದುತ್ತಿದ್ದ ನನಗೆ ಪ್ರಾಥಮಿಕ ಪ್ರೌಢ ಹಂತ ಮುಗಿಯುತ್ತಿದ್ದಂತೆ ಶಿಕ್ಷಣ ಕ್ಷೇತ್ರ ಬೇಡವೆನಿಸತೊಡಗಿ ಬೇರೆ ಬೇರೆ ಸಾಧ್ಯತೆಗಳ ಕ್ಷೀಣ ಪರಿಚಯವಾಗತೊಡಗಿತ್ತು. ಶತಾಯ ನಿರಾಕರಿಸಿದರೂ ಮನೆಯ ಬಲವಂತಕ್ಕೆ ಕಡೆಗೂ ತರಬೇತಿಗೆ ಸೇರಿದ ಎರಡು ವರ್ಷಗಳು ಪಟ್ಟ ಹಿಂಸೆ ಮತ್ತು ಅಲ್ಲಿನ ಪರಿಸರ, ಸ್ನೇಹಿತರ ಒಲವಿನ ದಿನಗಳು ನನ್ನ ಮೇಲೆ ಅಧ್ಯಾಪಕರ ಕರುಣೆ, ಮೆಚ್ಚುಗೆ ಪ್ರೋತ್ಸಾಹ ಎಲ್ಲವೂ ನೆನಪಿನಲ್ಲಿವೆ. ಸದಾ ಚಡಪಡಿಸುತ್ತಿದ್ದ ನನ್ನ ಅಳಲಾಟವನ್ನು ಮನೆಯವರು ಕೇಳಿಸಿಕೊಳ್ಳದಿದ್ದರೂ ನನ್ನ ಅಧ್ಯಾಪಕರೂ ಸಹಿಸಿದ್ದು ಈಗಲೂ ಸೋಜಿಗ ನನಗೆ. ಶಿಕ್ಷಕ ವೃತ್ತಿ ಬೇಡವೆನಿಸದಿರಲೂ ಕಾರಣವಿತ್ತು. ಶೈಕ್ಷಣಿಕ ಸಾಮಾನ್ಯಜ್ಞಾನವನ್ನ  ಗಳಿಸಲು ತುಂಬಾ ಪ್ರಯತ್ನ ಪಡುತ್ತಿದ್ದ ನನಗೆ ಯಾವುದೇ ಸಾಮಾನ್ಯಜ್ಞಾನ ಸ್ಪರ್ಧೆಯಲ್ಲಿ ಯಾವತ್ತೂ ಪ್ರಥಮ ಸ್ಥಾನ. ಸ್ಥಳೀಯ, ಜಿಲ್ಲೆ, ರಾಜ್ಯ ಮಟ್ಟದ ಬಹಳಷ್ಟು ಸ್ಪರ್ಧೆಗಳಲ್ಲಿ ಬಹುಮಾನಗಳನ್ನ ಗಿಟ್ಟಿಸಿದ್ದರಿಂದಲೂ ತುಂಬಾ ಓದುತ್ತಿದ್ದುದರಿಂದಲೂ ಕೆ.ಎ.ಎಸ್‌ ಅಥವಾಐ.ಎ.ಎಸ್. ಮಾಡಬೇಕೆಂಬ ಹುಚ್ಚು ಹತ್ತಿತ್ತು. ಅದಾವುದೂ ಸಾಧ್ಯವಾಗದೇ ಖಿನ್ನತೆಗೆ ಬಿದ್ದೆ.ಖಿನ್ನತೆಯ ಪರ್ವ ಆರಂಭವಾದದ್ದು ಅಲ್ಲಿಂದಲೇ.ಕೆಲಸ ಸಿಕ್ಕ ಮೇಲೆ ಒಂದೆರಡು ಸಲ ಕೆ.ಎ.ಎಸ್. ಪರೀಕ್ಷೆ ಬರೆದು ಒಮ್ಮೆ ಮಾತ್ರ ಪ್ರಿಲಿಮಿನರಿಯಲ್ಲಿ ಯಶಸ್ವಿಯಾಗಿ ನಂತರ ಸಾಧ್ಯವಾಗದೇ ಪ್ರಯತ್ನವನ್ನೇ ಬಿಟ್ಟುಬಿಟ್ಟೆ. ಉದ್ಯೋಗವದಕ್ಕಿದ ಆಲಸ್ಯ ಜೊತೆಗೆತಿ ರುಗಾಟ, ಸಂಘಟನೆಯ ರುಚಿಯೂ ಕಾರಣ. ಇಷ್ಟವಿಲ್ಲದೇ ಬಹಳವೆಂದರೆ ಬಹಳ ಚಿಕ್ಕ ವಯಸ್ಸಿನಲ್ಲೇ ಉದ್ಯೋಗ ಹಿಡಿದು ನಂತರ ಓದುವುದು ಮುಂದುವರೆಸಿ ಬಿ.ಎ.  ಬಿ.ಎಡ್. ಎಂ.ಎ. ಮಾಡುವ ವೇಳೆಗೆ ಓದುವುದು ಸಾಕೆನಿಸಿತ್ತು.ರಂಗಭೂಮಿ, ಸಾಹಿತ್ಯ, ವಿಜ್ಞಾನ ಪರಿಷತ್ ಗೀಳು ಹಿಡಿದಿತ್ತು. ಒಂದಂತೂ ನಿಜ ನನ್ನ ಬೇರೆ ಬೇರೆ ಚಟುವಟಿಕೆಗೆ ನನ್ನ ಉದ್ಯೋಗ ಆತ್ಮವಿಶ್ವಾಸದ ದೀವಿಗೆ ಹಿಡಿದಿತ್ತು.ಸ್ವಾವಲಂಬನೆ ಬದುಕಿಗೆ ದಾರಿಯಾಗಿಯೂ, ಮನೆಯ ಆರ್ಥಿಕತೆಗೆ ಸಹಕಾರಿಯಾಗಿಯೂ ಒದಗಿಬಂತು. ಸತತ ೧೫ ಕ್ಕೂ ಹೆಚ್ಚು ವರ್ಷ ನನ್ನ ಓಡಾಟ, ರಂಗಭೂಮಿ ಚಟುವಟಿಕೆ, ಮೊದಲ ಬಾರಿಗೆ ಒಂದು ತಿಂಗಳು ರಜೆ ಪಡೆದು ನಾಟಕದಲ್ಲಿ ಅಭಿನಯಿಸಿದ್ದು, ಆ ಮೂಲಕ  ಶಿಕ್ಷಣದಲ್ಲಿ ರಂಗಕಲೆಯೆಂಬ ಎನ್.ಎಸ್.ಡಿ.ಯ ಮೂರು ತಿಂಗಳ ತರಬೇತಿ, ನಾಟಕ ನಿರ್ಮಾಣ, ಅಭಿನಯ, ಕಾಲೇಜುಗಳಲ್ಲಿ ಸತತವಾಗಿ ಸೆಮಿನಾರ್‌ಗಳು, ವಿಜ್ಞಾನ ಜಾಥಾಗಳು ಮೊದಲಾದ ಕ್ರಿಯಾತ್ಮಕತೆಗೆ ರಹದಾರಿಯೂ ಆಯಿತು.ಸುಮಾರು ಮೂರು ನಾಲ್ಕು ಬಾರಿ ಕರ್ನಾಟಕ ಸುತ್ತಿದ ಓಡಾಟದ ಹುಚ್ಚನ್ನ ಬೆಂಬಲಿಸಿದ್ದು ಇದೇ ಉದ್ಯೋಗ.ಯಾವುದೇ ಕೆಲಸಕ್ಕೂ ದಿಟ್ಟತನದಿಂದ ಮುನ್ನುಗ್ಗುವ ಪ್ರಕ್ರಿಯೆಯಿಂದ ಆರ್ಥಿಕ ಸ್ವಾವಲಂಬನೆ ಹೆಣ್ಣುಮಕ್ಕಳಿಗೆ ಅದೆಷ್ಟು ಮುಖ್ಯವೆಂಬುದನ್ನೂ ತಿಳಿಸಿಕೊಟ್ಟಿತ್ತು. ಇನ್ನು ನನ್ನ ನೌಕರಿಯ ಸ್ವರೂಪ ಸಹಜವಾಗಿ ವಯಸ್ಸಿನಲ್ಲಿ ಚಿಕ್ಕ ಮಕ್ಕಳೊಂದಿಗೆ ಒಡನಾಡುವುದು.ಅಷ್ಟೊತ್ತಿಗಾಗಲೇ ಈ ಹುದ್ದೆಗೂ ತೀವ್ರ ಪೈಪೋಟಿ ಏರ್ಪಟ್ಟಿದ್ದರೂ ಜಿಲ್ಲೆಗೆ ಆರನೇ ಸ್ಥಾನ ಪಡೆದು ಶಾಲೆಯೊಂದನ್ನು ಆರಿಸಿಕೊಂಡು ತಾಲೂಕು ಕೇಂದ್ರದಿಂದ ೫ ಕಿ.ಮೀ. ಇದ್ದ ನಾಗತೀಹಳ್ಳಿ ಎಂಬ ಆ ಗ್ರಾಮವನ್ನು ತಲುಪಿದಾಗ ನಿಜಕ್ಕೂ ಖುಷಿಯಾಗಿತ್ತು.ಒಂದಿಷ್ಟು ಒಳ ಪ್ರದೇಶ, ಸುತ್ತ ತೋಟ, ಹಸಿರಿನ ನಡುವಿನ ಹೆಂಚಿನದಾದರೂ ಸುಸಜ್ಜಿತ ಕಟ್ಟಡ.ಸೊಗಸೋ ಸೊಗಸು. ಮತ್ತು ಆ ಕಾಲಕ್ಕೆ ಆಧುನಿಕವೇ ಆಗಿದ್ದಂತಹ ಶಾಲೆಯದು ಸ್ಥಾಪನೆಯಾಗಿ ಸರಿಯಾಗಿ ೫೦ ವರ್ಷವಾಗಿತ್ತು.ಆಶ್ಚರ್ಯವೆಂದರೆ ಆ ಶಾಲೆಯಲ್ಲಿ ಎಲ್ಲಾ ಬಗೆಯ ಸೌಲಭ್ಯಗಳಿದ್ದವು. ಮೂರು ಕೊಠಡಿಗಳು, ಅಡುಗೆಮನೆ, ಶೌಚಾಲಯ, ಆಟದ ಮೈದಾನ, ಪೀಠೋಪಕರಣ, ನೀರಿನ ವ್ಯವಸ್ಥೆ, ಕಲಿಕೋಪಕರಣಗಳು, ಸಂಗೀತೋಪಕರಣಗಳು, ಆಟದ ಸಾಮಗ್ರಿಗಳು, ಮತ್ತೂ ವಿಸ್ಮಯವೆಂದರೆ ವಿಜ್ಞಾನದ ಉಪಕರಣಗಳು ಇದ್ದವು..ಉದಾ. ಟೆಲಿಸ್ಕೋಪ್, ಮೈಕ್ರೋಸ್ಕೋಪ್, ಪ್ರಯೋಗಾಲಯದಲ್ಲಿ ಉಪಯೋಗಿಸುವ ಸಾಮಗ್ರಿಗಳು, ಎಲ್ಲವೂ..ಏನುಂಟು ಏನಿಲ್ಲ.. ಅದು ಗ್ರಾಮವಾದರೂ ಇಡೀ ಗ್ರಾಮ ಒಂದೇ ಜನಾಂಗದವರು ಮತ್ತು ಎಲ್ಲರೂ ವಿದ್ಯಾವಂತರು, ಆರ್ಥಿಕವಾಗಿ ಸಬಲರು.ಅಷ್ಟರಲ್ಲಾಗಲೇ ಅಲ್ಲಿಗೂ “ಕಾನ್ವೆಂಟ್ ಶಿಕ್ಷಣದ ಬಿಸಿಗಾಳಿ ಸೋಕಿತ್ತು. ಕೆಲವರು ಇಂಗ್ಲೀಷ್ ಮಾಧ್ಯಮ ಆರಿಸಿಕೊಂಡು ಸಮೀಪದ ಆಂಗ್ಲ ಮಾಧ್ಯಮ ಶಾಲೆಗೆ ಆಟೋಗಳಲ್ಲಿ ಓಡಾಡುತ್ತಿದ್ದರೆ ಅಷ್ಟೇ ಸಂಖ್ಯೆಯಲ್ಲಿ ಸರ್ಕಾರಿ ಶಾಲೆಗೂ ಬರುತ್ತಿದ್ದರು.ಸ್ವಚ್ಛವಾಗಿ, ಮುದ್ದಾಗಿ ಕಾಣುತ್ತಿದ್ದ ಬುದ್ದಿವಂತ ಮಕ್ಕಳವರು.ವೈವಿಧ್ಯ ಆಚರಣೆಗಳೂ ಆ ಗ್ರಾಮದಲ್ಲಿದ್ದವು. ವರ್ಷಕ್ಕೊಮ್ಮೆಕೆಂಡ ತುಳಿಯುವ ಅದ್ದೂರಿ ಜಾತ್ರೆ, ಹುಣ್ಣಿಮೆ ಅಮಾವಾಸ್ಯೆಗೆ ಕಟ್ಲೆಗಳು, ಮಾದೇಶ್ವರ ಮೊದಲಾದವು.ಶ್ರಾವಣದಲ್ಲಿ ಪ್ರತಿ ಸೋಮವಾರ ಮನೆಮನೆಗೆ ಹೋಗಿ ಕಂತೆಭಿಕ್ಷೆ ಎತ್ತಿ ಒಟ್ಟಿಗೆ ಊಟ ಮಾಡುವುದು ಮತ್ತು ಆ ಸಮಯದಲ್ಲಿ ಯಾವುದೇ ಅನ್ಯಜಾತಿಯವರಿಗೆ ಊರಿನೊಳಗೆ ಪ್ರವೇಶವಿಲ್ಲ. ಮರುಳಸಿದ್ದೇಶ್ವರ ಗ್ರಾಮದೇವರಾದ್ದರಿಂದ ಅನ್ಯರ ಪ್ರವೇಶ ನಿಷಿದ್ಧ.ಊರಿನೊಳಗೆ ಮಾಂಸ, ಮದ್ಯ ಕೂಡ ತರುವಂತಿರಲಿಲ್ಲ ಮಾತ್ರವಲ್ಲ ಸೇವಿಸಿಯೂ ಬರುವಂತಿರಲಿಲ್ಲ.ನಮ್ಮಲ್ಲಿದ್ದ ಒಬ್ಬ ಮುಸ್ಲಿಂ ಮೇಷ್ಟಿಗೆ ಆ ದಿನ ಅಲಿಖಿತ ರಜೆ. ಮಾದೇಶ್ವರ ಹಾಗೂ ಕಟ್ಲೆಗಳಲ್ಲಿ ಮಹಿಳೆಯರಿಗೆ ಅವಕಾಶವಿಲ್ಲ. ಹೀಗೆ ಸಣ್ಣಪುಟ್ಟ ನಿರ್ಬಂಧಗಳಿದ್ದ ಊರದು.ಮುಖ್ಯವಾಗಿ ಆ ಊರಿನ ಮಂದಿ ವೀರಗಾಸೆಯಲ್ಲಿ ಪರಿಣತರು. ಕಾರ್ಯಕ್ರಮಗಳಿಗಾಗಿ ದೇಶ ವಿದೇಶ ಸುತ್ತಿದ್ದರು.ಈ ಎಲ್ಲವನ್ನೂ ಸಾಂಸ್ಕೃತಿಕ ದೃಷ್ಟಿಕೋನದಿಂದ ನೋಡಲು ಕಲಿಯಲು ಸಾಧ್ಯವಾಯಿತು. ಒಂದಿಷ್ಟು ಮುನಿಸಿನಲ್ಲಿಯೇ ನವಂಬರ್ ೧ ರಂದು ಹುದ್ದೆ ಸ್ವೀಕರಿಸಲು ತೆರಳಿದೆ.ಅಲ್ಲಿನ ವಾತಾವರಣಕಂಡು ಮನಸ್ಸಾಗಲೇ ಅರಳಿತ್ತು.ಅಮ್ಮನ ಶ್ರಮದ ಫಲ ಈ ನೌಕರಿ.ಅವರಿಗಂತೂ ಹಿಗ್ಗು. ಆ ದಿನ ಅವರೂ ಜೊತೆಗಿದ್ದರು.ಅಕ್ಟೋಬರ್ ೨೫ ರಂದು ಆದೇಶ ಸ್ವೀಕರಿಸಿದರೂ ೫ ದಿನಗಳ ತರಬೇತಿ ಮುಗಿಸಿ ಶಾಲೆಗೆ ಪಾದವಿಟ್ಟದ್ದು ನವಂಬರ್ ೧ ನೇ ತಾರೀಕು.ಏಳನೇ ತರಗತಿಯವರೆಗೆ, ನಾಲ್ಕು ಮಂದಿ ಶಿಕ್ಷಕರಿದ್ದ ಶಾಲೆ. ವಿದ್ಯಾರ್ಥಿಗಳ ಸಂಖ್ಯೆಯೂ ಪರವಾಗಿಲ್ಲ ಎನ್ನುವಷ್ಟು.ಏಳನೇ ತರಗತಿಯವರಂತೂ ನನ್ನ ಎತ್ತರವೇ ಇದ್ದರು.ನಂತರ ಗೆಳೆಯರಾದರು.ಸಹೋದ್ಯೋಗಿಗಳ ಸಹಕಾರವಂತೂ ಬಹಳ ಸ್ಮರಣೀಯ.ಪರಸ್ಪರ ಸಹಕಾರ.ಪ್ರಬುದ್ಧ ನಡೆ, ಏನೇ ಕೆಲಸ ಮಾಡಬೇಕಿದ್ದರೂ ಮಾತನಾಡಿಕೊಂಡು ಆಚರಣೆಗೆ ತರುವುದು, ಸುಖ-ದುಃಖಗಳಲ್ಲಿ ಪಾಲ್ಗೊಳ್ಳುವಿಕೆ ಮೊದಲಾದ ಸ್ನೇಹ ಸೌಹಾರ್ದತೆಯಿತ್ತು.ಊರಿನ ಮಂದಿಯೂ ಅಷ್ಟೆ,  ಆ ಊರಲ್ಲಿದ್ದಷ್ಟೂ ದಿನ ಸಂಪರ್ಕ-ಸಹಕಾರಕ್ಕೇನೂ ಕೊರತೆಯಿರಲಿಲ್ಲ. ಬರೋಬ್ಬರಿ ೧೯ ವರ್ಷಗಳು ಒಂದೇ ಶಾಲೆಯಲ್ಲಿ ಸೇವೆ ನಿರ್ವಹಿಸಿದರೂ ಒಂದೇ ಒಂದು ಕಪ್ಪುಚುಕ್ಕಿಯಿಲ್ಲದೇ ಕೆಲಸ ಮಾಡಿದೆ. ಇವತ್ತಿಗೂ ಅಲ್ಲಿನ ಮನೆಮಗಳು ನಾನು.೧೫೦ ಮನೆಗಳಿರುವ ಗ್ರಾಮದಲ್ಲಿ ಯಾರ ಮನೆಗೆ ಕಾಲಿಟ್ಟರೂ ಆತಿಥ್ಯಕ್ಕೇನೂ ಬರವಿಲ್ಲ. ಕಾಲಕ್ರಮೇಣ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿ ಇಬ್ಬರು ಶಿಕ್ಷಕರಾಗಿ ತರಗತಿಗಳೂ ಕಡಿಮೆಯಾದವು.ಊರೊಳಗೆ ನಾಲ್ಕೈದು “ಕಾನ್ವೆಂಟ್” ಬಸ್ಸುಗಳು ಕಾಲಿಟ್ಟವು. ನಾವು ಏನೇ ಆಶ್ವಾಸನೆಕೊಟ್ಟರೂ ಪೋಷಕರ ಅಕ್ಕ ಪಕ್ಕದ ಮನೆಗಳ ಮಕ್ಕಳೊಡನೆ  ಹೋಲಿಕೆ ಪ್ರಾರಂಭವಾಗಿ ನಮ್ಮ ಮಕ್ಕಳೆಲ್ಲರೂ ಆಂಗ್ಲಮಾಧ್ಯಮ ಆರಿಸಿಕೊಂಡು ಸರ್ಕಾರಿ ಶಾಲೆಯ ಕೊಠಡಿಗಳಿಗೆ ಬೀಗ ಹಾಕಿಸಿಯಾಯಿತು. ಅದಕ್ಕೂ ಮೊದಲು ಅಲ್ಲಿನ ಕರ್ತವ್ಯದ ಅವಧಿ ನಿಜಕಕೂ ಮರೆಯಲಾರದಂತದ್ದು.ವಿದ್ಯಾರ್ಥಿಗಳೊಂದಿಗೆ ಸಾಕಷ್ಟು ಪ್ರಯೋಗ ಮಾಡಿದೆ.ಪಠ್ಯಕ್ರಮವಲ್ಲದೇ ಬೇರೆ ಬೇರೆ ವಿಷಯಗಳನ್ನು ತಿಳಿಸಿ ಹೇಳುತ್ತಿದ್ದುದೇ ಹೆಚ್ಚು.ನನ್ನ ವಿಜ್ಞಾನ,ರಂಗಭೂಮಿಯ ಸಂಪರ್ಕ ಬಳಸಿಕೊಂಡು ಸಾಕಷ್ಟು ಕೆಲಸ ಮಾಡಿದೆ.ಪಠ್ಯಗಳನ್ನೆಲ್ಲ ರಂಗಕಲೆಯ ಮೂಲಕವೇ ಬೋಧನೆ ಮಾಡುತ್ತಿದ್ದುದು.ವಿಜ್ಞಾನ ಯೋಜನೆಗಳನ್ನು ತಯಾರಿಸಿಕೊಂಡು ಮಕ್ಕಳು ಬೇರೆ ಬೇರೆ ಕಡೆ ಪ್ರದರ್ಶನ ಕೊಟ್ಟವು. ವಿಜ್ಞಾನ ನಾಟಕಗಳನ್ನು ಮಾಡಿಸಿದೆ. ಪಠ್ಯೇತರ ಪರೀಕ್ಷೆಗಳನ್ನು ಕಟ್ಟಿಸಿದೆ.ಶಾಲೆಯಲ್ಲಿದ್ದ ವಿಜ್ಞಾನದ ಸಾಮಗ್ರಿಗಳನ್ನು ಬಳಸಿ ಪ್ರಯೋಗಗಳನ್ನು ಕೈಗೊಂಡೆವು.ಆಟದ ವಸ್ತುಗಳು, ಸಂಗೀತೋಪಕರಣಗಳು, ಗಣಿತ ಕಿಟ್‌ಗಳನ್ನು ಸಮರ್ಥವಾಗಿ ಬಳಸಿದೆವು.ಸಾಮಾನ್ಯಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಿ ಸತತವಾಗಿ ೫-೬ ವರ್ಷ ಬಹುಮಾನ ಗಳಿಸಿದರು.ಪ್ರತಿಭಾಕಾರಂಜಿಯಲ್ಲಿ ಪ್ರಶಂಸೆ ಗಿಟ್ಟಿಸಿದರು.ವಾರಕ್ಕೊಮ್ಮೆ ಪರಿಸರದೆಡೆಗೆ ಯಾತ್ರೆ ಸಾಗುತ್ತಿತ್ತು.ಅನೇಕ ಗಿಡಗಳನ್ನು ನೆಟ್ಟು ವಿದ್ಯಾರ್ಥಿಗಳೇ ಬೆಳೆಸಿದರು. ವಿಜ್ಞಾನ ಪರಿಷತ್ ಸಹಯೋಗದಲ್ಲಿ ಶಾಲೆಯ ಪಕ್ಕದಲ್ಲಿದ್ದ ಬಯಲಿನಲ್ಲಿ ನೂರಾರುಗಿಡ ನೆಟ್ಟೆವು. ಕೈತೋಟ ಮಾಡಿದೆವು.ಜನಗಳಿಗಾಗಿ ಜಾಗೃತಿ ಕಾರ್ಯಕ್ರಮ ಆಯೋಜಿಸಿದೆವು.ಮಕ್ಕಳೊಂದಿಗೆ ಸಿನೆಮಾ ನೋಡಿದೆವು.ಪಿಕ್‌ನಿಕ್ ಹೋದೆವು.ಪಠ್ಯ ಹಾಗೂ ಪಠ್ಯೇತರ ವಿಷಯಗಳೆರಡೂ ಯಶಸ್ವಿಯಾಗಿ ಜತೆಜತೆಗೇ ಸಾಗಿತ್ತು.ಅಕ್ಷರದಾಸೋಹ ಆರಂಭವಾದಾಗ ಶುಚಿ ರುಚಿ ಆಹಾರ ಪೂರೈಸಿದೆವು.ಮಕ್ಕಳ ಆರೋಗ್ಯತಪಾಸಣೆ ಮಾಡಿಸಿದೆವು.ಬಡ ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿ ವಿತರಿಸಿದೆವು. ಎರಡು ಬಾರಿ ಬೇಸಿಗೆಯಲ್ಲಿ ಶಿಬಿರವನ್ನೂ ಏರ್ಪಡಿಸಿ ಊರಿನ ಮಕ್ಕಳನ್ನು ಸೇರಿಸಿ ರಂಗತರಬೇತಿಯನ್ನೂ ಕೊಡಿಸಿದ್ದಾಗಿತ್ತು.ವಿದ್ಯಾರ್ಥಿಗಳು ಅದ್ಭುತವಾಗಿ ಪ್ರದರ್ಶನ ನೀಡಿದ್ದರು.ಅಷ್ಟೇ ಅಲ್ಲದೇ ತೀರಾ ಇತ್ತೀಚೆಗೆ ಶಾಲೆಯನ್ನು ಮುಚ್ಚುವ ಮುನ್ನ ಹೊರಗಿನ ರಂಗ ತಂಡಗಳನ್ನು ಕರೆಸಿ ನಾಟಕೋತ್ಸವವನ್ನೂ ಆಯೋಜಿಸಿದ್ದೆವು.  ಈ ಎಲ್ಲಾ  ಚಟುವಟಿಕೆಗಳಿಗೂ ನಮ್ಮ ಮೇಷ್ಟುಗಳ  ಸಹಕಾರವಿತ್ತು. ಮಹತ್ವದ ವಿಷಯವೆಂದರೆ ಬಹಳಷ್ಟು ಮಂದಿ ಖ್ಯಾತನಾಮರು ಶಾಲೆಗೆ ಕಾಲಿಟ್ಟದ್ದು.ಅರಸೀಕೆರೆ ಮೂಲಕ ಹಾದು ಹೋಗುವ ಗೆಳೆಯರು, ಹಿರಿಯ ಲೇಖಕರು.ಸಾಹಿತಿಗಳು, ರಂಗಕರ್ಮಿಗಳು, ಸಂಗೀತಗಾರರು, ಅಧಿಕಾರಿಗಳು ನನ್ನನ್ನು ಸಂಪರ್ಕಿಸಿ ಕರೆ ಮಾಡಿ ಶಾಲೆಗೆ ಭೇಟಿಕೊಟ್ಟು ಹೋಗುತ್ತಿದ್ದದು ಸ್ಮರಣೀಯ ಸಂಗತಿ. ಹೆಸರು ಪಟ್ಟಿ ಮಾಡಿದರೆ ಅನೇಕವಾದೀತು. ಅವರಿಗೆಲ್ಲಾ ಶಾಲೆಯ ಆತಿಥ್ಯದಕ್ಕುತ್ತಿತ್ತು.ಸರಳ ಸಾಮಾನ್ಯರಂತೆ ಅವರೂ ಮಕ್ಕಳೊಂದಿಗೆ ಬೆರೆಯುತ್ತಿದ್ದaರು. ಧನಾತ್ಮಕ ಅಂಶಗಳನ್ನಷ್ಟೇ ದಾಖಲಿಸಿದೆನೇನೋ. ಋಣಾತ್ಮಕವಾಗಿ ವಿಷಯಗಳು ಸಾಕಷ್ಟು ಕಾಡಿದರೂ ಸಂತೋಷದ ಸಂಗತಿಗಳೆದುರು ಅವು ಕಾಲಕ್ರಮೆಣ ಮಾಸಿಹೋಗುವಂತವು.ಕೆಲವು ಕಿರಿಕಿರಿಗಳಾದವು. ನಾನೂ ಸಹ ಈ ಕೆಲಸದ ವಿಷಯಕ್ಕೆ ಕೆಲವೊಮ್ಮೆ ಉದಾಸೀನ ಮಾಡಿದ್ದಿದೆ.ಚಿಕ್ಕ ಪ್ರಾಯದಲ್ಲಿ ಕೆಲವು ತಪ್ಪು ಮಾಡಿದ್ದಿದೆ. ನೂರಕ್ಕೆ ನೂರಷ್ಟೇನೂ ಪ್ರಾಮಾಣಿಕವಾಗಿ ಕೆಲಸ ಮಾಡದಿದ್ದರೂ ವಿದ್ಯಾರ್ಥಿಗಳ ವಿಷಯದಲ್ಲಿ ಮಾತ್ರ ಯಾವುದೇ ತಾರತಮ್ಯಅಥವಾ ಅಸಡ್ಡೆ ಮಾಡಿದ್ದಿಲ್ಲ. ನನ್ನ ಕನಸುಗಳನ್ನು ಕೊಂದು ಹಾಕಿದ ಉದ್ಯೋಗವಿದೆಂದು ಅನೇಕ ಬಾರಿ ತೀರಾ ಖಿನ್ನತೆಗೆ ಬಿದ್ದು ಕೆಲಸ ಬಿಟ್ಟುಬಿಡುತ್ತೇನೆಂದಿದ್ದು ಅದೆಷ್ಟು ಸಲವೋ.ಅಸಾಧ್ಯ ನೆನಪಿನ ಶಕ್ತಿ ಕುಂದಿತೆಂದು ಪರಿತಾಪ ಪಟ್ಟಿದದೆಷ್ಟೋ.ಉದ್ವೇಗಕ್ಕೊಳಗಾಗಿ ಸಂಘಟನೆಯೆಡೆ ತೀವ್ರ ತೊಡಗಿಸಿಕೊಂಡು ತಾತ್ಕಾಲಿಕವಾಗಿ ಮರೆತದ್ದಿದೆ.ಸ್ವಾಭಿಮಾನಿತನವನ್ನು ದಕ್ಕಿಸಿದ ಉದ್ಯೋಗವೆಂದು ಸಮಾಧಾನ ಪಟ್ಟಿದ್ದಿದೆ.ಈಗಂತೂ ನಿರ್ಲಿಪ್ತ. ಶಾಲೆ ಮುಚ್ಚಿದ್ದು ನನ್ನ ಪಾಲಿಗೆ ಹಿನ್ನಡೆ.ಕನ್ನಡ ಮಾಧ್ಯಮದಲ್ಲಿ ಭವಿಷ್ಯವಿಲ್ಲವೆಂದು ಆಂಗ್ಲ ಮಾಧ್ಯಮ ಅರಸಿ ಹೋದ ಪೋಷಕರನ್ನು ಮನವೊಲಿಸಲು ಪ್ರಯತ್ನಿಸಿದರೂ ನನ್ನ ಮನೆ ಮಕ್ಕಳು ಅದೇ ಆಂಗ್ಲ ಮಾಧ್ಯಮದಲ್ಲಿ ಭವಿಷ್ಯ ಅರಸುವಾಗ, ಪೋಷಕರು ಆ ಕುರಿತು ಪ್ರಶ್ನಿಸುವಾಗ ಉತ್ತರ ತೋಚದೇ ಸುಮ್ಮನಾಗಿದ್ದೇನೆ. ಇಂಗ್ಲೀಷ್‌ನ ಪ್ರಭಾವಕ್ಕೆ ಸಿಲುಕಿದ ಮತ್ತು ಅಲ್ಲಿಯೇ ಮಕ್ಕಳ ಉಜ್ವಲ ಬೆಳಗನ್ನು ನಿರೀಕ್ಷಿಸುವ ತಂದೆತಾಯಿಗಳ ಮಹತ್ವಾಕಾಂಕ್ಷೆಯೂ ತಪ್ಪೆಂದು ಹೇಳಲಾಗದು. ಸತತ ಇಪ್ಪತ್ತು ವರ್ಷಗಳ ಶಿಕ್ಷಣ ಇಲಾಖೆ ನೀಡಿದ ಅಪಾರ ಅನುಭವದ ಅನೇಕ ದಿನಾಂಕ ಹಾಗೂ ದಿನಗಳು ಇಲ್ಲಿ ಸಂಕ್ಷಿಪ್ತವಾಗಿ ದಿನಚರಿಯಂತೆ ಮಾಹಿತಿ ದಾಖಲಿಸಿವೆ. ಸದ್ಯಕ್ಕೆ ಸಿ.ಆರ್.ಪಿ.ಯಾಗಿ ನನ್ನ ವಲಯಕ್ಕೆ ಸೇರಿರುವ  ಸರ್ಕಾರಿ ಶಾಲೆಗಳಲ್ಲಿ  ಬಹಳಷ್ಟು ಕೆಲಸ ಮಾಡಬೇಕೆಂಬ ಆಶಯವಿದೆ.ಇಲ್ಲೀವರೆಗಿನ ಸಹಾಯ ಸಹಕಾರಕ್ಕಾಗಿ ಗ್ರಾಮಸ್ಥರಿಗೂ, ಇಲಾಖೆಯ ಸಹದ್ಯೋಗಿಗಳಿಗೂ, ಸಹೃದಯ ಅಧಿಕಾರಿಗಳಿಗೂ, ಶಿಕ್ಞಣ ಇಲಾಖೆಗೂ ಆಭಾರಿ. **************************************

ಶಿಕ್ಷಣ ಕ್ಷೇತ್ರ ಮತ್ತು ಎರಡು ದಶಕಗಳ ಪ್ರಯಾಣ Read Post »

ಪುಸ್ತಕ ಸಂಗಾತಿ

ಕಾಗೆ ಮುಟ್ಟಿದ ನೀರು

ಪುಸ್ತಕ ಪರಿಚಯ ಕಾಗೆ ಮುಟ್ಟಿದ ನೀರು ಪುಸ್ತಕ:- ಕಾಗೆ ಮುಟ್ಟಿದ ನೀರುಲೇಖಕರು:-ಡಾ.ಪುರುಷೋತ್ತಮ ಬಿಳಿಮಲೆಪ್ರಕಾಶನ:-ಅಹರ್ನಿಶಿ ಪ್ರಕಾಶನ,ಶಿವಮೊಗ್ಗ ಕಾಗೆ ಮುಟ್ಟಿದ ನೀರು ಪುಸ್ತಕ ಅನೇಕ ಓದುಗ ಪ್ರಭುಗಳ ಉತ್ತಮ ಅನಿಸಿಕೆಗಳ ಓದಿ ತೀರಾ ಮನಸ್ಸಾಗಿ ಓದಲು ಹಂಬಲ ಹೆಚ್ಚಾಗಿ,ತೀರಾ ಕಡಿಮೆ ರಿಯಾಯತಿಯಲ್ಲಿ ಪುಸ್ತಕ ಕೊಡುವುದಾದರೆ ಕಳಿಸಿ ಎಂದು ಪ್ರಕಾಶಕರಿಗೆ ಸಂದೇಶವನ್ನು ಕಳಿಸಿದ ಕೂಡಲೇ, ಆಯ್ತು ವಿಳಾಸ ಬರಲಿ ಎಂದು ಅತ್ತಕಡೆಯಿಂದ ಕಳುಹಿಸಿ ಕೊಟ್ಟರು.ಆತ್ಮಕತೆ ನನ್ನಿಷ್ಟದ ಒಂದು ಓದುವಿನ‌ ವಿಭಾಗ. ಪುಸ್ತಕವೂ ಕೈಸೇರಿತು, ಸಿಕ್ಕಗಳಿಗೆ ಮೊದಲು ಬೆನ್ನುಡಿ-ಮುನ್ನುಡಿ ಓದುವ ಹವ್ಯಾಸ ನನ್ನದಾಗಿದೆ. ಬಿಳಿಮಲೆರವರು ಒಬ್ಬ ಎಡಪಂಥೀಯರು, ಚಿಂತಕರೂ, JNU ಯಲ್ಲಿ ಪ್ರಾಧ್ಯಾಪಕರು ಅಂತ ಮಾತ್ರ ತಿಳಿದಿದ್ದ ನನಗೆ, ಕಾಗೆ ಮುಟ್ಟಿದ ನೀರಿನಿಂದ ಅವರೇನೂ ಅಂತ ಮತ್ತಷ್ಟು ಒಳಹೊಕ್ಕು ತಿಳಿಯಲು ಅನುಕೂಲವಾಯಿತು. ಬಂಟಮಲೆಯಿಂದ ದೆಹಲಿವರೆಗೆ ಬೆಳೆದು ದೇಶ-ವಿದೇಶ ಸುತ್ತಿ ಅನೇಕ ಕಾರ್ಯಗಳನ್ನು ಮಾಡಿದ ಇವರ ಎದೆಗಾರಿಕೆಗೆ ಮೆಚ್ಚಲೇಬೇಕು. ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡವನ್ನು ಪಳಗಿಸುತ್ತಿರುವುದು ಸಹ ವಿಶೇಷ. ಬಾಲ್ಯದ ನೆನಪನ್ನು ಹೆಕ್ಕಿ, ಪಿಯು ಫೇಲಾಗಿ ಶಿಕ್ಷಣ ಪೂರೈಸಿ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಾ, ಬದುಕು ಬಂದಂತೆ ಎದುರಿಸಿ, ಕೊನೆಗೆ ಬದುಕು ಕಟ್ಟಿಕೊಂಡ ಇವರ ಯಶೋಗಾಥೆ ನನಗೆ ಸ್ಪೂರ್ತಿ ಆಗಬಹುದೆಂದರೆ ತಪ್ಪಾಗಲಿಕ್ಕಿಲ್ಲ. ದೊಡ್ಡ-ದೊಡ್ಡ ಮನುಷ್ಯರೆನಿಸಿಕೊಂಡವರ ಮನಸ್ಥಿತಿ ಹೇಗಿರುತ್ತದೆಂದು ಕಂಬಾರರ ಕರಾಳ ಮುಖವನ್ನ ಎತ್ತಿ ಹಿಡಿದು, ಅಮೆರಿಕನ್ ಆಫ್ ಇಂಡಿಯನ್ ಸ್ಟಡೀಸ್ ನಲ್ಲಿನ ಇವರ ಸೇವೆ, ಜೆ-ಎನ್-ಯುನಲ್ಲಿ ಕನ್ನಡ, ಕನ್ನಡಪೀಠ ಕಟ್ಟಿದ್ದು ಒಂದು ದಾಖಲೆ, ಇತಿಹಾಸ. ಮದುವೆ, ದೆಹಲಿಯಲ್ಲಿ ಮನೆ, ಪುನರ್ಜನ್ಮ, ಮಾಟಮಂತ್ರ, ಜಾತಿ, ರೋಗದಲ್ಲೂ ಗೆದ್ದಿದ್ದು ಮೇಲ್ನೊಟ್ಟಕ್ಕೆ ಕಟ್ಟುಕತೆಯಂತಿದ್ದರೂ ಇದೊಂದು ವಿಶೇಷ. ಹೋರಾಟದ ಬದುಕು ಆಪ್ತವಾಗಿ ಓದಿಸಿಕೊಂಡು ಹೋಗುವ ಪುಸ್ತಕ. ನೀರೇ ಗತಿಯಿಲ್ಲದ ಊರಲ್ಲಿ ಕಾಗೆ ಮುಟ್ಟಿದ ನೀರು ನಲ್ಲಿ, ಹಳ್ಳ-ಕೊಳ್ಳದಲ್ಲಿ ಬಂದಿದೆ ನೀವು ಮುಟ್ಟುತ್ತೀರೋ ಇಲ್ಲೋ ಕುಡಿತಿರೋ ಇಲ್ಲ, ಬಳಸುತ್ತಿರೋ ಇಲ್ಲೋ ಅಂತ ಗದ್ಗರ್ತೀತನಾಗಿ ಯಾರೋ ಗದರಿಸಿ ಹಾಡು ಹಾಡಿದಂತೆ ಕಿವಿಯಲ್ಲಿ ಇಂಪರಿಸುತಿದೆ. ಸಕಲ ರೋಗಗಳಿಂದಾನೆ ಬದುಕುತ್ತಿದ್ದಾರೋ ಏನೋ ಅನ್ನಿಸುತ್ತಿದೆ.ಇತ್ತೀಚಿಗೆ ನಿವೃತ್ತರಾಗಿರಬಹುದು ಯಕ್ಷಗಾನದಲ್ಲಿ ಅಪಾರ ಆಸಕ್ತಿ ಬೆಳೆಸಿಕೊಂಡಿರುವ ಕಲಾವಿದ, ಸಂಶೋಧಕ, ಜಾನಪದ ಸಂಶೋಧಕರು, ಕನ್ನಡವಾದಿ, ಮಹಿಳಾಪರರು ಅಪಾರ ಶಿಷ್ಯೋತ್ಸವವನ್ನು ಹೊಂದಿರುವ ನೇರ, ನಿಷ್ಠುರವಾದಿ ಇವರ ಅನುಭವಗಳನ್ನು ಓದುತ್ತಾ ಹೋದರೆ ನಾವೇ ಇದ್ದು ಅನುಭವಿಸುತ್ತಿದ್ದೇವೆನೋ ಅಂತ ಅನ್ನಿಸುವ ಮಟ್ಟಿಗೆ ಆಪ್ತತೆಯ ನಿರೂಪಣೆ ಮುನ್ನುಡಿಯಲ್ಲಿ ಅಚ್ಚುಕಟ್ಟಾಗಿ ಕನ್ನಡಿ ತೋರಿಸಿದ ದಿನೇಶ್ ಅಮಿನ್ ಮಟ್ಟುರವರು, ಒಂದು ರಾತ್ರಿಯಿಡೀ ಯಕ್ಷಗಾನ ನೋಡಿದಂತ ಅನುಭವವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. *********************************** ಶಿವರಾಜ್ ಮೋತಿ

ಕಾಗೆ ಮುಟ್ಟಿದ ನೀರು Read Post »

ಕಾವ್ಯಯಾನ

ಮಳೆಗಾಲದ ಬಿಸಿಲುಕವಿತೆ

ಕವಿತೆ ಮಳೆಗಾಲದ ಬಿಸಿಲು ಅಬ್ಳಿ,ಹೆಗಡೆ ಹಗಲ ಶಿಶು ಶಶಿಯೊಡನೆಆಟದಲಿ ಸೋತು.ಮುಗಿಲುಗಳ ಮರೆಯಲ್ಲಿಅಳುತಿಹನು ಕೂತು.ಮಗುವ ಕಾಣದ ತಾಯಿರಮಿಸಿ ತಾ ಕರೆಯೆ-ಕಣ್ಣೊರೆಸಿ ಹೊರ ಬಂದಮಗು-ನಗುವ ‘ಹೊಳೆಯೆ’. ******************************

ಮಳೆಗಾಲದ ಬಿಸಿಲುಕವಿತೆ Read Post »

ಕಾವ್ಯಯಾನ

ಬದುಕು- ಬವಣೆ

ಕವಿತೆ ಬದುಕು- ಬವಣೆ ಸಹನಾ ಪ್ರಸಾದ್ ಗಂಡ ಹೆಂಡಿರ ಸಂಬಂಧಸಂಸಾರಕ್ಕೆ ಇದೇ ಮೆರಗುಉಫ಼್ಫ಼್ ಹೇಳಲಾಗದು ಅನುಬಂಧಜತೆಗಿರುವರು ಸಾಯುವವರೆಗೂ ಆದರೆ ಇರಲೇಬೇಕಿಲ್ಲ ಪ್ರೀತಿವ್ಯಾವಹಾರಿಕವಾದರೂ ನಡೆದೀತುಇದ್ದರೆ ಸಮಾಜದ ಭೀತಿಪ್ರೀತಿಯೂ ಗಿಲೀಟು ಬತ್ತಿ ಹೋದ ಮೇಲೆ ಪ್ರೀತಿಯ ಚಿಲುಮೆಜತೆಗಿರುವುದೂ ಅನಿವಾರ್ಯವಾದಾಗಮುದುಡಿದ ಮನಸ್ಸುಗಳಿಗೆ ಎಲ್ಲಿದೆ ಒಲುಮೆಕಿತ್ತೇ ಹೋಯಿತೇನೋ ಅನಿಸುತ್ತೆ ಹೃದಯದ ಭಾಗ ನಮ್ಮ ಸಮಾಜದಲ್ಲಿ ಇಲ್ಲ ವಿಚ್ಚೇದನಒಮ್ಮೆ ಜತೆಗೂಡಿದರೆ ಮುಗಿಯಿತು ಬದುಕುಒಳ್ಳೆ ಜನ ಸಿಗದಿದ್ದರೆ ಬದುಕೇ ವೇದನಸಹಿಸಿಕೊಳ್ಳಬೇಕು ಖಾಲಿಯಾಗುವವರೆಗೂ ಸರಕು! *************************

ಬದುಕು- ಬವಣೆ Read Post »

ಇತರೆ, ಜೀವನ

ಬದಲಾದ ಕಾಲಕ್ಕೆ ಹಳ್ಳಿಯ ಬದುಕು

ಲೇಖನ ಬದಲಾದ ಕಾಲಕ್ಕೆ ಹಳ್ಳಿಯ ಬದುಕು ಸರಿತಾ ಮಧು ಹಳ್ಳಿಗಳ ದೇಶವೇ ನಮ್ಮದು. ಮೊದಲಾದರೆ ಸುಂದರ ಸ್ವರ್ಗದಂತೆ ಇದ್ದವು. ಕೂಡು ಕುಟುಂಬ, ಅದಕ್ಕೆ ಹೊಂದಿಕೊಂಡಂತೆ ಗದ್ದೆ- ತೋಟಗಳು, ರಕ್ತ ಸಂಬಂಧಗಳು ಹಾಗೂ ಮಾನವೀಯ ನೆಲೆಯಲ್ಲಿ ಒಟ್ಟಿಗೆ ಸೇರಿ ನಲಿಯುತ್ತಿದ್ದ ಸಂದರ್ಭಗಳು. ಮೂರು – ನಾಲ್ಕು ತಲೆಮಾರಿನ ಅನುಭವಗಳ ಬೆರೆತ ಸಂಸಾರ. ಮನೆಗಳಲ್ಲಿ ಆಡಂಬರವಿರಲಿಲ್ಲ ಮನಸಿನಲ್ಲಿ ಆತ್ಮೀಯತೆ ಇತ್ತು. ಅವಿಭಕ್ತ ಭಾವ ರಕ್ತಗತವಾಗಿ ಮುಂದುವರೆಯುತ್ತಿತ್ತು. ಹಣಕಾಸಿಗೆ ಅಡಚಣೆಯಿತ್ತು ಅದರ ಹೊರತು ಪರಿಶುದ್ಧವಾದ  ಬದುಕಿಗಲ್ಲ. ನಗರ ಜೀವನಕ್ಕೆ ಮನಸೋತ ಕೆಲವು ವ್ಯಕ್ತಿಗಳು ಮಾತ್ರ ಈ ವ್ಯವಸ್ಥೆಯ ವಿರೋಧಿಸಿ ಹೊರನಡೆದಿರಬಹುದು. ಶಾಲಾ ಶಿಕ್ಷಣದ ಜೊತೆ ಜೊತೆಗೆ ಹಿರಿಯರ ಮೂಲಕ ಅನೌಪಚಾರಿಕವಾಗಿ ಜೀವನ ಮೌಲ್ಯಗಳು ಒಟ್ಟುಗೂಡಿ ಮುಂದಿನ ಬದುಕಿಗೆ ಮೆರುಗು ತರುತ್ತಿದ್ದವು.ಹಳ್ಳಿಯ ಶಾಲೆಯಲ್ಲಿ ಕಲಿತ ನನ್ನನ್ನೂ ಒಳಗೊಂಡಂತೆ ಸಾವಿರಾರು ಕನಸುಗಳಿಗೆ ರೆಕ್ಕೆ ಹಚ್ಚಿದ್ದು ನಮ್ಮ ಹಳ್ಳಿಯೇ . ಇಲ್ಲಿಗೆ ಸುಮಾರು ಐವತ್ತು – ಅರವತ್ತು ವರ್ಷಗಳ ಹಿಂದಿನ ಜೀವನ ಬಹಳ ಕಠಿಣವಾಗಿತ್ತು. ಹೀಗಂತ ನನ್ನ ಅಪ್ಪ ಲೆಕ್ಕವಿಲ್ಲದಷ್ಟು ಸಲ ನಮ್ಮ ಬಳಿ ಹೇಳಿದ್ದಾರೆ. ಅವರು ವಾಸಿಸುತ್ತಿದ್ದ ಮನೆಯಲ್ಲಿ ಕನಿಷ್ಟ ಮೂವತ್ತು ಮಂದಿ ಇರುತ್ತಿದ್ದರು. ಊಟವೆಂದರೆ ಅವರಿಗೆ ಮೂಲಭೂತ ಅವಶ್ಯಕತೆ ಆಗಿತ್ತು. ಕಾರಣ ಈಗಿನಷ್ಟು  ಸುಖ ಸಮೃದ್ಧಿಯ ಭೋಜನವಿರುತ್ತಿರಲಿಲ್ಲ. ಅನ್ನದ ಊಟವೆಂದರೆ ಅದು ಹಬ್ಬ ಹರಿದಿನಗಳಿಗೆ ಮಾತ್ರವಂತೆ. ರಾತ್ರಿ ರೊಟ್ಟಿ ಊಟವಾದರೆ ಒಂದೆರಡು ರೊಟ್ಟಿಗಳನ್ನು ಪಲ್ಯದ ಸಮೇತ ಸುತ್ತಿ ಜೋಡಿಸಿಟ್ಟ  ಜೋಳದ ಚೀಲಗಳ ನಡುವೆ ಬಚ್ಚಿಡುತ್ತಿದ್ದರಂತೆ.ಅದು ರಹಸ್ಯವಾಗಿ ಬೆಳಗಿನ ತಿಂಡಿಗಾಗಿ.ಶಾಲೆಗೆ ಹೋಗುವಾಗ ತಿನ್ನುವುದಕ್ಕಾಗಿ. ಕಾರಣ ಈಗಿನಂತೆ ಮಕ್ಕಳ ಕೈತಿಂಡಿ ಇರುತ್ತಿರಲಿಲ್ಲ. ಹಾಗಾಗಿಯೇ ಅವರು ಸದೃಢ ವಾಗಿದ್ದಿರಬೇಕು. ಬಟ್ಟೆಗಳೂ ಕೂಡ ಅತಿ ಕಡಿಮೆ . ಆದರೆ ನಮ್ಮ ಈಗಿನ ಬದುಕು ವಿಭಿನ್ನವಾದ ನೆಲೆ ಕಂಡುಕೊಂಡಿದೆ. ಎಲ್ಲವೂ ಕೈಗೆಟುಕುವ ಅಂತರದಲ್ಲೇ ಇವೆ . ಸಾವೂ ಕೂಡಾ ಅಲ್ಲವೇ? ನಮ್ಮ ಹಿಂದಿನ ಹಳ್ಳಿ ಹಾಡು ಪಾಡು ಕಷ್ಟಕರ ವಾಗಿದ್ದಿರಬಹುದು. ಆದರೆ ಈಗಿನಂತೆ ಇರಲಿಲ್ಲ. ಎಲ್ಲವೂ ನಗರೀಕರಣದ   ಪ್ರಭಾವ . ಅನುಕರಿಸಿದ್ದು ತುಸು ಹೆಚ್ಚೇ ಆಯಿತಲ್ಲವೇ? ಆಧುನಿಕತೆಯ ಸೋಗಿಗೆ ಮುಗ್ಧ ಜನರು ಗುರುತೇ ಸಿಗದಷ್ಟು ಬದಲಾದರು. ಕುಟುಂಬಗಳು ಒಡೆದವು ಹಾಗೆಯೇ ಭಾವನೆಗಳೂ. ಮೊದಲೆಲ್ಲ ಬೀದಿಯಲ್ಲಿ ಜಗಳಗಳು ಸಾಮಾನ್ಯವಾಗಿ ಇದ್ದವು. ಅಲ್ಲಿಗೆ ಮಾತು ನೇರವಾಗಿ ಮುಗಿಯುತ್ತಿದ್ದವು. ಆದರೆ ಈಗ ಮುಸುಕಿನೊಳಗಿನ ಗುದ್ದಾಟ. ಮಾತುಗಳಿಲ್ಲದ ಒಳಗೊಳಗಿನ ಕಿಚ್ಚುಗಳು, ಸಲ್ಲದ ಮಾತುಗಳು. ನಿಜಕ್ಕೂ ಹಳ್ಳಿಗಳು ಬದಲಾಗಬಾರದಿತ್ತು. ಸೌಕರ್ಯಗಳಿಗೆ ಮನಸೋತ ಮಂದಿ ನೆಮ್ಮದಿಯನ್ನು ಬಲಿನೀಡಿದ್ದಾರೆ. ಹೊಲಗದ್ದೆಗಳು ಕ್ರಮೇಣ ತೋಟಗಳಾದವು. ಆಹಾರ ಬೆಳೆಗಳು ಮರೆಯಾಗಿ ವಾಣಿಜ್ಯ ಬೆಳೆಗಳಿಗೆ ಹೆಚ್ಚು ಆದ್ಯತೆ ನೀಡಲಾಯಿತು. ಮೊದಲಾದರೆ ವಸ್ತುಗಳ ವಿನಿಮಯದ ಮೂಲಕವೇ ಜೀವನ ನಡೆಯುತ್ತಿತ್ತು. ಮನೆಯಲ್ಲಿ ಎಲ್ಲವೂ ಚೀಲದಲ್ಲಿ , ಹಗೇವು ಅಥವಾ ದೊಡ್ಡ ಪ್ರಮಾಣದಲ್ಲಿ ಸಂಗ್ರಹವಾಗುತ್ತಿದ್ದವು‌. ಆದರೆ ಈಗ ಹಳ್ಳಿಗಳಲ್ಲಿ ಭತ್ತ, ರಾಗಿ, ಜೋಳ, ಅವರೆ, ಉದ್ದು, ಕಡಲೆ ಹೀಗೆ ಬೆಳೆಗಳೇ ಇಲ್ಲ. ಮನೆಯಲ್ಲಿ ದನಕರುಗಳೂ ಇಲ್ಲ. ಸಾಕುವವರಿಲ್ಲದೇ ಎಲ್ಲವೂ ಮಾರಲ್ಪಟ್ಟವು. ಸ್ವಂತಿಕೆಯೂ ಬಿಕರಿಯಾಯಿತು ಈ ನಡುವೆ. ಎತ್ತುಗಳಿಲ್ಲದ ಜಾಗಕ್ಕೆ ಟ್ರ್ಯಾಕ್ಟರ್ಗಳು, ಎತ್ತಿನ ಬಂಡಿಯ ಜಾಗಕ್ಕೆ ಕಾರುಗಳು ಮನೆಯನ್ನು ಸೇರಿದವು. ಎಲ್ಲವೂ ಬಹಳ ಬೇಗ ಬದಲಾಗಿ ಬಿಟ್ಟಿತು. ಜೀವನ ಶೈಲಿ ಪಾಶ್ಚಿಮಾತ್ಯ ಸಂಸ್ಕೃತಿಯ ಕಡೆಗೆ ಕರೆದೊಯ್ದಿತು. ಬಣ್ಣ ಬಣ್ಣದ ಬಟ್ಟೆಗಳಂತೆ ಹೊದಿಕೆ ಮಾತ್ರ ಬದಲಾಗಲಿಲ್ಲ ಮನುಷ್ಯನೇ ಬದಲಾವಣೆಗೆ ಒಳಪಟ್ಟನು. ಕಾರಣ ಬದಲಾವಣೆ ಜಗದ ನಿಯಮ , ಏನಂತೀರಿ? ಆಹಾರ – ವಿಹಾರ , ಉಡುಗೆ- ತೊಡುಗೆ, ಮನೆ- ಸಂಸಾರ ಎಲ್ಲವೂ ಸಾರ್ವಜನಿಕವಾಗಿ ಪ್ರದರ್ಶನಗೊಂಡವು. ನಾಲ್ಕು ಗೋಡೆಗಳ ನಡುವಣ ಬದುಕು ನಾಲ್ಕು ದಿಕ್ಕುಗಳಲ್ಲಿ ಪ್ರಸಾರವಾಗಿದ್ದು ನಮ್ಮ ಸಾಧನೆಯೇ? ಹಳ್ಳಿಗಳಾದ್ರೂ ಮೊದಲಿನಂತೆ ಇರಬೇಕಿತ್ತು ಅಂತ ನನಗೆ ತುಂಬಾ ಸಲ ಅನಿಸಿದೆ. ಅದರಲ್ಲೂ ವಿಶೇಷವಾಗಿ ನಮ್ಮ ಅಮ್ಮನ ಅಡುಗೆಯ ವಿಷಯದಲ್ಲಿ ನಾನೂ ತುಂಬಾ ಮಿಸ್ ಮಾಡಿಕೊಳ್ಳಲು ಕಾರಣ ಇದೆ. ಅಮ್ಮ ಒಲೆಯಲ್ಲಿ ಅಡುಗೆ  ಮಾಡುತ್ತಿದ್ದ ದಿನಗಳವು. ಎಷ್ಟು ರುಚಿಯಾಗಿರುತ್ತಿತ್ತು ಅಂದರೆ ಈಗಲೂ ಬಾಯಿಯಲ್ಲಿ ನೀರೂರುತ್ತದೆ.ನಮ್ಮ ಮನೆಗೆ ಸದಾ ಬರುತ್ತಿದ್ದ ನನ್ನ ಅಪ್ಪನ ಸೋದರಮಾವ ಕೇವಲ ಸಾಂಬಾರನ್ನೇ ಸೊರ್ ಎಂದು ಕುಡಿದುಬಿಡುತ್ತಿದ್ದರು. ಇದಲ್ಲವೇ ಹಳ್ಳಿಯ ಊಟದ ಗಮ್ಮತ್ತು‌. ಈಗೆಲ್ಲಿದೆ ನಮಗೆ ಒಲೆ ಹಚ್ಚಿ ಅಡುಗೆ ಮಾಡುವ ಸಮಯ ಗ್ಯಾಸ್ ಮೇಲೆ ಕುಕ್ಕರ್ ಸೀಟಿ ಒಡೆಸಿ , ರುಬ್ಬುವ ಯಂತ್ರದಲ್ಲಿ ನುಣ್ಣಗೆ ಮಾಡಿ  ಜಠರಕ್ಕೆ ಕೆಲಸವನ್ನು ನೀಡದೇ ಬೊಜ್ಜು ಬರಿಸಿಕೊಂಡಿದ್ದು. ಬರೆಯುತ್ತಾ ಹೋದರೆ ಹಳ್ಳಿಯ ಜೀವನದ ಸೊಗಸಿಗೆ ಪದಗಳೇ ಕಡಿಮೆ. ನನಗಂತೂ ಹೀಗೆ ಹಲವಾರು ಬಾರಿ ಅನಿಸಿದ್ದು ಹೋದವರೆಲ್ಲ ಪುಣ್ಯಮಾಡಿದ್ದಿರಬೇಕು. ಸಂಪೂರ್ಣ ಜೀವನವನ್ನು ಅನುಭವಿಸಿದ್ದಾರೆ‌. ಮೊದಲ ಹಳ್ಳಿಯ ಬದುಕು ಮತ್ತೊಮ್ಮೆ ಬಾರದೇ? ******************************

ಬದಲಾದ ಕಾಲಕ್ಕೆ ಹಳ್ಳಿಯ ಬದುಕು Read Post »

ಕಾವ್ಯಯಾನ

ರಚ್ಚೆ ಹಿಡಿದ ಮನ

ಕವಿತೆ ರಚ್ಚೆ ಹಿಡಿದ ಮನ ಸ್ವಭಾವ ಕೋಳಗುಂದ ಮಳೆ ನಿಂತ ನೆಲದಲ್ಲಿನಡೆಯುತ್ತಲೇ ಇದ್ದಳುಗುರುತು ಮಾಡಿ ಗುರಿಯೆಡೆಗೆ ಹಸಿಟ್ಟಿಗೆ ಬಿಸಿ ನೀರು ಸುರುವಿತಟ್ಟಿ ಬೆಳರ ಚಿತ್ರದ ಹಚ್ಚೆಬೆಂದ ರೊಟ್ಟಿ ಹಸಿದ ಹೊಟ್ಟಗೆ ಹರಗಿದ ಹೊಲಕ್ಕೆ ಬೀಜ ಬಿತ್ತಿನೀರು ಹಾಯಿಸಿ ಕಳೆ ಕಿತ್ತುಕೊಯ್ಲಿಗೆ ಕಾದು ರಾಶಿ ಪೈರಾಗಿಸಿದ್ದ ರಚ್ಚೆ ಹಿಡಿದ ಕೂಸುನೆಟಿಗೆ ತೆಗೆದು ನೀವಾಳಿಸಿರಂಚು ಬೂದಿಯ ತಿಲಕದ ಕೈಚಳಕ ಗುಡಿಯ ಗಂಟೆಯ ನಾದಕ್ಕೆತಲೆದೂಗಿದ ಎಳೆ ಜೋಳದ ತೆನೆನೊರೆ ಉಕ್ಕಿ ಕೆಚ್ಚಲ ತಂಬಿಗೆ ಸೋರಿತ್ತು ಕೊಟ್ಟಗೆಯ ಕರು ಚಂಗನೆ ಎಗರಿಅಂಗಳದ ರಂಗೋಲಿ ಗೋಮಮಯಅಜ್ಜಿಗೆ ಕೈಲಾಸ ತೀರ್ಥ ಕೋಲು ಕನ್ನಡಕದ ಅಜ್ಜಊರುರು ಅಲೆದು ಊರು ಕಟ್ಟಿದಮೊಮ್ಮೊಗನು ಮನೆಯೊಡೆದತಲೆ ಬಾಗಿಲು ಸೀಳಿ *****

ರಚ್ಚೆ ಹಿಡಿದ ಮನ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಸ್ಮಿತಾ ಭಟ್ ಒಲವಿನ ನಿರೀಕ್ಷೆಯ ಬದುಕ ಮುಗಿಸಿದ್ದೇನೆನಲಿವಿನ ದೀಪದೆದುರು ಕಣ್ಮುಚ್ಚಿ ಕುಳಿತಿದ್ದೇನೆ/ ಯಾರಿಗೆ ಯಾರೂ ಆಸರೆಯಲ್ಲ ಇಲ್ಲಿಸೆರೆಯಾದ ಉಸಿರಿನ ಕೀಲಿ ತೆಗೆದಿದ್ದೇನೆ / ಕ್ಷಮಿಸು ಕಣ್ಣತೇವಕ್ಕೆ ನನ್ನ ಹೊಣೆ ಮಾಡದಿರುಕರವಸ್ತ್ರ ಇರಿಸಿಕೊಳ್ಳುವ ರೂಢಿ ಮರೆತಿದ್ದೇನೆ/ ಮೊಗಕೆ ಒಳಗುದಿಯ ತೋರುವ ಇರಾದೆ ಇಲ್ಲಬರಿದೇ ತರತರದ ಮಾತಾಗಿ ನಗುತ್ತಿದ್ದೇನೆ/ ಬಲಹೀನ ಮನಸು ಏನೂ ಸಾಧಿಸದು ಮಾಧವಾಭವಿತವ್ಯದ ಬಾಗಿಲಿಗೆ ತೋರಣವ ಕಟ್ಟಿದ್ದೇನೆ/ *********************************

ಗಝಲ್ Read Post »

ಕಾವ್ಯಯಾನ

ಆಯ್ಕೆ ನಿನ್ನದು

ಕವಿತೆ ಆಯ್ಕೆ ನಿನ್ನದು ಸುಮಾ ಆನಂದರಾವ್ ಜುಳುಜುಳು ಹರಿವ ಝರಿ ತೊರೆಗಳುನಯನ ಮನೋಹರ ಪರ್ವತ ಶಿಖರಗಳುಬಣ್ಣ ಬಣ್ಣದ ಹೂ ಗೊಂಚಲುಗಳುಹೀರಿದ ಮಕರಂದದಿ ಮಧು ಪಾತ್ರೆಯಸಿಹಿ ತುಂಬಿಸಿ ಝೇಂಕರಿಪ ದುಂಬಿಗಳುಕಣ್ಮನ ಸೂರೆಗೊಳ್ಳುವ ಹಚ್ಚ ಹರಿದ್ವರ್ಣಒಳನುಸುಳಲು ಹೊಂಚುಹಾಕುತಿಹ ಸೂರ್ಯಕಿರಣಒಂದೇ ಎರೆಡೇ ಗೋವರ್ಧನ ಗಿರಿ ಸಂಪತ್ತು ಶ್ಯಾಮನೇಕೆಭಾರದ ಗಿರಿಯ ಒಂದೇ ಬೆರಳಲಿ ಹಿಡಿದ ?ಹಗುರಾದ ಕೊಳಲನೇಕೆ ಎರಡು ಕೈಯಲಿ ಪಿಡಿದ!ಅಚ್ಚರಿಯೊಡನೆ ದಿವ್ಯ ಸತ್ಯವೊಂದಿಹುದುಗಿರಿಯಲಿ ಸೌಂದರ್ಯ ತುಂಬಿಕೊಂಡರೂಗಾಢ ಕತ್ತಲು, ಭಯಂಕರ ಮೃಗಗಳು, ಸರೀಸೃಪಗಳುಓಡಲಾಳದಿ ಇವೆಯಲ್ಲವೇ?ಕೊಳಲಾದರೋ ತನ್ನೊಳಗೆ ನುಗ್ಗಿದ ಶ್ವಾಸವನ್ನು ಸಹ ಹಿಡಿದಿಡದೆಸುಶ್ರಾವ್ಯವಾಗಿ ಕಿವಿಗೆ ಇಂಪು ನೊಂದ ಮನಕೆ ತಂಪು ನೀಡುವುದು ನಿರಾಡಂಬರ ನಿಷ್ಕಲ್ಮಶವ ಅನಾವರಣಗೊಳಿಸುವಕೊಳಲಾಗುವೆಯ ಶ್ಯಾಮ ನಿನ್ನ ಭದ್ರವಾಗಿಎರೆಡು ಕೈಯಲಿ ಪಿಡಿವಗಿರಿಯಾಗುವೆಯ ಆಗಲು ಹಿಡಿವ ಆದರೆಎತ್ತಿ ಆಗಸದೆತ್ತರಕೆ ಒಂದೇ ಬೆರಳಲಿಆಯ್ಕೆ ನಿನ್ನದು *****************************************

ಆಯ್ಕೆ ನಿನ್ನದು Read Post »

ನಿಮ್ಮೊಂದಿಗೆ

ಒಂದು ಲಸಿಕೆ ಹನಿ

ಕವಿತೆ ಒಂದು ಲಸಿಕೆ ಹನಿ ಕೊಟ್ರೇಶ್ ಅರಸೀಕೆರೆ ತಮ್ಮದಲ್ಲದ ತಪ್ಪಿಗೆ ಜೀವ ತೆತ್ತವರಿಗಾಗಿಬೂದಿ ಮುಚ್ಚಿದ ಕೆಂಡದ ಬದುಕುಒಡಲಲಿಟ್ಟುಕೊಂಡವರಿಗಾಗಿಬರಿಗಾಲಲ್ಲಿ ನಡೆದ ಪುಟ್ಟ ಕಂದಮ್ಮಗಳಿಗೆನನ್ನ ಆತ್ಮಗೌರವ ಬಿಟ್ಟು ಕೇಳಿಕೊಳ್ಳತ್ತೇನೆಒಂದು ಲಸಿಕೆ ಹನಿಯನ್ನು ಚುಮುಕಿಸಿನಿಮಗಾಗಿಯೇ ಓಟು ಒತ್ತುತ್ತೇನೆ! ರಾತ್ರಿಯೆಲ್ಲ ಕೆಮ್ಮಿ ಉಸಿರಿಗಾಗಿ ಹೋರಾಡಿಪ್ರಾಣ ಬಿಟ್ಟವರಿಗಾಗಿಮಕ್ಕಳನ್ನು ಮನೆಯಲ್ಲಿರಿಸಿ ಸೇವೆಗೈದ ವೈದ್ಯದಾದಿಯರಿಗಾಗಿಸೇವೆ ಮಾಡುತ್ತಲೇ ಪ್ರಾಣ ಬಿಟ್ಟವರ ಪರವಾಗಿಮಂಡಿಯೂರಿ ಕೇಳಿಕೊಳ್ಳುತ್ತೇನೆ ಒಂದು ಹನಿಲಸಿಕೆ ಚುಮುಕಿಸಿ ನಿಮಗಾಗಿ ಓಟು ಒತ್ತುತ್ತೇನೆ! ನಾನು ಯಾರಲ್ಲೂ ಹೇಳುವುದಿಲ್ಲ ನೀವು ಪರಮ ದ್ರೋಹಿಗಳೆಂದುನಾನು ಯಾರಲ್ಲೂ ಹೇಳುವುದಿಲ್ಲ ನೀವುಠಕ್ಕ ದೇಶಭಕ್ತರೆಂದುನಾನು ಯಾರಲ್ಲೂ ಹೇಳುವುದಿಲ್ಲ ನೀವುವಂಚಕರೆಂದುಒಂದು ಹನಿಯ ಲಸಿಕೆ ಚುಮುಕಿಸಿ ಬಿಡಿನನ್ನ ಓಟು ನಿಮಗಾಗಿ ಎಂದು! ನಾನೂ ವಂಚಿಸಲು ಸಿದ್ಧನಿದ್ದೇನೆ ಜೀವಕ್ಕಾಗಿನಾನೂ ಮೋಸ ಮಾಡಲು ಸಿದ್ಧನಿದ್ದೇನೆ ಮಡಿದ ಮುಗ್ಧರಿಗಾಗಿನಾನೂ ಪರಮ ಪಾಪಿಯಾಗಲು ಸಿದ್ಧನಿದ್ದೇನೆ ನನ್ನ ಹತ್ತು ಬೆರಳುಗಳಲ್ಲೂ ಓಟು ಒತ್ತುತ್ತೇನೆಒಂದು ಹನಿಯ ಲಸಿಕೆ ಚುಮುಕಿಸಿ ಬಿಡಿ! ನಾನು ಓಟು ಒತ್ತುತ್ತಲೇ ಇರುವೆನಿಮ್ಮ ದಾಹ ತೀರಿಸಿಕೊಳ್ಳಿಬೇಡಿಕೊಳ್ಳುತ್ತೇನೆ ಈ ಜನಾಂಗದಉಳಿವಿಗಾಗಿ ಒಂದು ಲಸಿಕೆ ಹನಿಯಚುಮುಕಿಸಿ ಬಿಡಿ! *****************************

ಒಂದು ಲಸಿಕೆ ಹನಿ Read Post »

You cannot copy content of this page

Scroll to Top