ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಸಾವಿನಂಗಡಿಯಲ್ಲಿ

ಕವಿತೆ ಸಾವಿನಂಗಡಿಯಲ್ಲಿ ಅಬ್ಳಿ,ಹೆಗಡೆ ಈಗ..ಇದೊಂದು ಭ್ರಹತ್ ಅಂಗಡಿ   ಜಗದ ಮೂಲೆ,ಮೂಲೆಗೂ   ಕೋಟಿ,ಕೋಟಿ ಶಾಖೆಗಳ ತೆರೆದು   ಕುಳಿತಿದ್ದಾನೆ ಯಜಮಾನ ನಗುತ್ತಾ   ಎಲ್ಲ ಶಾಖೆಗಳಲ್ಲೂ ಭರ್ಜರಿ ವ್ಯಾಪಾರ   ಒಂದು ಕೊಂಡರೆ ಒಂದು ಫ್ರೀ,   ಗಿರಾಕಿಗಳಿಗೆ ಆಮಿಷ,ನೂಕು ನುಗ್ಗಲು   ಮೇಲಾಟ,ತಳ್ಳಾಟ ಕೊಂಡುಕೊಳ್ಳಲು   ಅಂತರಕಾಯ್ದುಕೊಳ್ಳುವವರ,ಇಲ್ಲದವರ   ಮುಖವಿದ್ದೂ ಮುಖವಾಡ ದರಿಸಿದವರ   ದರಿಸಿಲ್ಲದವರ,ಸಂದೋಹ ಎಲ್ಲೆಡೆಗೂ   ಹೊಸ,ಹೊಸ ಆವಿಷ್ಕಾರ   ಶೋ ಕೇಸುಗಳಲ್ಲಿ ಗ್ಯಾರಂಟಿ ಕಾರ್ಡುಗಳ   ಸಹಿತ.ಹಳೇ ಸಾಮಾನುಗಳೂ ಇವೆ   ಎಲ್ಲೋ ಅಪರೂಪಕ್ಕೊಮ್ಮೆ ಬೇಡಿಕೆ   ಅದಕ್ಕೆಂದೇ ಇಟ್ಟ ಕಪಾಟುಗಳಲ್ಲಿ   ಅಂಗಡಿಯ ಹಿಂದೆ,ಹಿಂದೆ ಕಾಣುವಂತೆ   ಅಪರೂಪಕ್ಕೆ ಕೊಳ್ಳಲು ಬಂದಾಗಲೂ   ಚೌಕಾಸಿ ಗಿರಾಕಿಗಳಿಗಾಗಿ ಕಿರಿ,ಕಿರಿ   ಯೆನಿಸಿದರೂ ಕೊಡುತ್ತಾನೆ ಯಜಮಾನ   ನಸುನಗುತ್ತ ಅವುಗಳನ್ನ.   ಈಗೀಗ ಲಭ್ಯವಿರುವ ಹೊಸ ಅವಿಷ್ಕಾರ   ಗಳಿಗೇ ಹೆಚ್ಚು ಬೇಡಿಕೆ ತುಂಬ   ಅಗ್ಗ ಅದಕ್ಕಾಗಿ.ಇಲ್ಲಿ ಕೊಳ್ಳಲು ಬೇಕಾದದ್ದು   ಹಣ ಅಲ್ಲ,ಮಾನ,ಪ್ರಾಣ,ಧರ್ಮ,ಅಧರ್ಮ   ನೀತಿ,ಅನೀತಿ,ಒಳಿತು,ಕೆಡುಕು,ಸತ್ಯ,ಸುಳ್ಳು   ನೋವು,ನಲಿವು,ಬಣ್ಣ,ಭಾಷೆ,ಸಾಕ಼ರ,ರಾಕ಼ಸ   ಯಾವುದಾದರೂ ಆದೀತು.   ಅಸಲಿಗೆ ಇಲ್ಲಿ ಸಿಗುವ ಸಾಮಾನುಗಳು   ಯಾವವು ಗೊತ್ತೇ….?   ಗುಣಿತಕ್ಕೆ ಸಿಗದ ಅಗಣಿತ,ಕಲ್ಪನೆಗೂ   ಎಟುಕದ ‘ಸಾವಿಲ್ಲ’ದ ಸಾವುಗಳು….!!    ಸಾವಿನಂಗಡಿ ಇದು,ಹೊಸ ಆಕರ್ಷಣೆ   ‘ಕೊರೋನಾ’ಕೊಳ್ಳಲು ಗಿರಾಕಿಗಳ   ಜಿದ್ದಾಜಿದ್ದಿ ಕಂಡು ಖುಷಿಯಿಂದಲೋ   ವಿಷಾದದಿಂದಲೋ…   ನಗುತ್ತಿದ್ದಾನೆ ಯಜಮಾನ,   ಲೋಕಾತೀತ,ಕಾಲಾತೀತ,ನಿರ್ಮೋಹಿ             ಅತೀತ ಎತ್ತರದಲ್ಲಿ ಕುಳಿತು….!!! *******************************

ಸಾವಿನಂಗಡಿಯಲ್ಲಿ Read Post »

ಕಾವ್ಯಯಾನ, ಗಝಲ್

ಮತ್ಲಾ ಗಜಲ್

ಮತ್ಲಾ ಗಜಲ್ ತೇಜಾವತಿ ಹೆಚ್.ಡಿ. ನೀನಿರದ ವಿರಾಮವು ಬೇಡವಾಗಿವೆ ಈಗಮಾಯಾ ಮನಸ್ಸು ಖಿನ್ನತೆಗೆ ಜಾರುತಿವೆ ಈಗ ನೀ ನೋಡದ ಅಲಂಕಾರವು ಮಂಕಾಗಿವೆ ಈಗತೊಟ್ಟ ಆಭರಣಗಳೇ ಭಾರವಾಗಿವೆ ಈಗ ನಿನ್ನಗಲಿದ ಇರುಳೆಲ್ಲವೂ ಘೋರವಾಗಿವೆ ಈಗದೇವಾ ಕಂಡ ಕನಸೆಲ್ಲವೂ ದುಃಸ್ವಪ್ನವಾಗಿವೆ ಈಗ ನೀನಾಡದ ಮಾತುಗಳು ಕರಗಿ ಹೋಗಿವೆ ಈಗಅಳಿದುಳಿದ ಭಾವನೆಗಳು ಹೆಪ್ಪುಗಟ್ಟಿವೆ ಈಗ ನೀನಿಲ್ಲದ ನಂದನವನ ಬರಡಾಗಿವೆ ಈಗಬೀಸುವ ತಂಗಾಳಿಯೂ ಬತ್ತಿಹೋಗಿವೆ ಈಗ ‘ತೇಜ’ ನೀ ಬಾರದ ದಿನಗಳು ಸ್ತಬ್ಧವಾಗಿವೆ ಈಗಹಗಲು ರಾತ್ರಿಯ ವ್ಯತ್ಯಾಸವೇ ತಿಳಿಯದಾಗಿವೆ ಈಗ *

ಮತ್ಲಾ ಗಜಲ್ Read Post »

ಇತರೆ, ಜೀವನ

ಭೂತಾಯಿಗೆ ನಮನ

ಲೇಖನ ಭೂತಾಯಿಗೆ ನಮನ ರಾಘವೇಂದ್ರ ಈ ಹೊರಬೈಲು ಇವತ್ತು ರಾತ್ರಿಯೆಲ್ಲಾ ಎಚ್ರಾಗಿರ್ಬೇಕು, ಮಲಗ್ಬಿಟ್ಟಿಯೋ. ರಾತ್ರಿಯೆಲ್ಲ ಹಬ್ಬ ಮಾಡ್ಬೇಕು, ಹಬ್ಬದಾಗೆ ಎಚ್ರಾಗಿರ್ದೆ  ಹಂಗೆ ಮಲ್ಗಿದ್ರೆ ದೇವ್ರು ಶಾಪ ಕೊಡ್ತಾನೆ ಕಣೋ” ನಾನು ಚಿಕ್ಕ ಹುಡುಗನಾಗಿದ್ದಾಗ ನಮ್ಮಮ್ಮನಾಡಿದ ಮಾತುಗಳು ಎಂದಿಗೂ ನನ್ನ ಮನಸ್ಸಿನಲ್ಲಿ ಅಚ್ಚಳಿಯದೆ ಕುಳಿತಿವೆ. “ಇದ್ಯಾವ ಹಬ್ಬನಪ್ಪ, ರಾತ್ರಿಯೆಲ್ಲ ಎಚ್ರಾಗಿರ್ಬೇಕಂತೆ” ಎಂದು ಗೊಣಗುಟ್ಟುತ್ತಾ ತೂಕಡಿಸುತ್ತಾ, ಅಮ್ಮನೋ ಅಪ್ಪನೋ ಹೇಳ್ತಾಯಿದ್ದ ಸಣ್ಣಪುಟ್ಟ ಕೆಲಸಗಳನ್ನು ಒಲ್ಲದ ಮನಸ್ಸಿನಿಂದ ನಿದ್ರೆಗಣ್ಣಿನಲ್ಲೇ ಮಾಡುತ್ತಾ, ಕೆಲವೊಮ್ಮೆ ಹೆಚ್ಚು ಕಡಿಮೆಯಾಗಿ, ಬೈಸಿಕೊಳ್ಳುತ್ತಾ ರಾತ್ರಿ ಕಳೆಯುತ್ತಿದ್ದ ಆ ದಿನಗಳನ್ನು ಮತ್ತು ಮಾರನೆ ದಿನ ಬೆಳ್ಳಂಬೆಳಗ್ಗೆ ಹೊಲದಲ್ಲಿ “ಅಚ್ಚಂಬ್ಲಿ ಅಳಿಯಂಬ್ಲಿ ಮುಚ್ಕಂಡ್ ತಿನ್ನೆ ಭೂಮ್ತಾಯಿ” ಎಂದು ಬೆಳೆಗಳಿಂದ ತುಂಬಿದ ಹೊಲದಲ್ಲಿ ಏನನ್ನೋ ಬೀರುತ್ತಾ, ಕೂಗುತ್ತಾ ಸಾಗುತ್ತಿದ್ದ ಅಪ್ಪನ ಧ್ವನಿಯನ್ನು ಮರೆಯಲು ಸಾಧ್ಯವೇ? ಸಾಂಸ್ಕೃತಿಕವಾಗಿ ಭಾರತವು ವಿಶ್ವದಲ್ಲೇ ಅತೀ ಶ್ರೀಮಂತ ರಾಷ್ಟ್ರ. ಹಬ್ಬ- ಹರಿದಿನಗಳ ವಿಷಯಕ್ಕೆ ಬಂದಿದ್ದೇ ಆದರೆ ನಮ್ಮಷ್ಟು ವಿವಿಧತೆ ಮತ್ತು ವಿಶೇಷತೆಯನ್ನು ಇನ್ನೆಲ್ಲೂ ಕಾಣಲು ಸಾಧ್ಯವಿಲ್ಲ. ಒಂದೊಂದು ಹಬ್ಬವೂ ಅದರದೇ ವಿಶೇಷತೆ ಮತ್ತು ಪ್ರಾಮುಖ್ಯತೆಯಿಂದಾಗಿ ಗಮನ ಸೆಳೆಯುತ್ತದೆ. ಒಂದು ಕಾಲದಲ್ಲಿ ಭಾರತ ದೇಶದ ಹಬ್ಬಗಳೆಂದರೆ ಅವು ಭಕ್ತಿ, ಸಂಸ್ಕೃತಿ, ಬೆರೆಯುವಿಕೆ, ಸಂತೋಷಗಳ ಸಮ್ಮಿಲನವಾಗಿತ್ತು. ನಮ್ಮ ತಾತ ಮುತ್ತಾತಂದಿರೆಲ್ಲರೂ ಹಬ್ಬಗಳನ್ನು ಒಂದು ಭಯಕ್ಕಾಗಿ, ಭಕ್ತಿಗಾಗಿ, ಎಲ್ಲರ ಒಳಿತಿಗಾಗಿ ಗಾಂಭೀರ್ಯದಿಂದ ಆಚರಿಸುತ್ತಿದ್ದರು. ಆದರೆ ಇಂದು ಎಲ್ಲಾ ಬುಡ ಮೇಲಾಗಿದೆ. ಉದಾಹರಣೆಗೆ ಹೇಳಬೇಕೆಂದರೆ, ಗಣೇಶನ ಹಬ್ಬ, ದೀಪಾವಳಿ, ಹೋಳಿ ಮುಂತಾದವು ತಮ್ಮ ಮೂಲ ಅರ್ಥ ಕಳೆದುಕೊಂಡು ಅನರ್ಥದತ್ತ ಸಾಗುತ್ತಿವೆ. ಭಯ-ಭಕ್ತಿಯಿಂದ, ನಿರ್ಮಲ ಮನಸ್ಸಿನಿಂದ ಆಚರಿಸುತ್ತಿದ್ದ ಗಣೇಶನ ಹಬ್ಬ ಇಂದು ಹೊಡೆದಾಟ, ಕಿತ್ತಾಟದ ಹಬ್ಬವಾಗಿದೆ. ಯಾರೂ ತಪ್ಪಾಗಿ ಭಾವಿಸದೇ ಸೂಕ್ಷ್ಮವಾಗಿ ಗಮನಿಸಿದ್ದೇ ಆದರೆ, ಹಲವೆಡೆ ಗಣೇಶನ ಹಬ್ಬದಲ್ಲಿ ಗಣೇಶನೇ ಕಾಣೆಯಾಗಿ, ಅಶ್ಲೀಲ ಆರ್ಕೆಸ್ಟ್ರಾ, ಕುಡಿತ, ಕುಣಿತ, ಐಟಂ ಸಾಂಗುಗಳದ್ದೇ ಮೆರವಣಿಗೆ ನಡೆಯುತ್ತಿದೆ. ರಾಷ್ಟ್ರ ಕವಿ ಕುವೆಂಪುರವರ “ಕಟ್ಟಕಡೆಯಲಿ ದೇವರ ಗುಡಿಯಲಿ ಪೂಜಾರಿಯೇ ದಿಟದ ನಿವಾಸಿ ದೇವರೇ ಪರದೇಸಿ” ಎಂಬ ಮಾತಿನಂತೆ “ಕಟ್ಟಕಡೆಯಲಿ ಗಣೇಶನ ಹಬ್ಬದಲಿ ಆರ್ಕೆಸ್ಟ್ರಾ ಐಟಂ ಸಾಂಗುಗಳು, ಕುಡುಕರ ಹುಚ್ಚು ಕುಣಿತವೇ ದಿಟದ ನಿವಾಸಿ, ಗಣೇಶನೇ ಪರದೇಸಿ” ಅಲ್ವಾ? ದೀಪಗಳಿಂದ ಅಲಂಕೃತವಾಗಿ ಮನಸ್ಸಿನ ದುಃಖ ಕಳೆದು ಎಲ್ಲರ ಬಾಳಿಗೂ ಹರಷದ ಬೆಳಕನ್ನು ನೀಡುವಂತ ಹಬ್ಬವಾಗಲಿ ಎಂದು ಆಚರಿಸುತ್ತಿದ್ದ ‘ದೀಪಾವಳಿ ಹಬ್ಬ’ ಇಂದು ತನ್ನ ಅರ್ಥವನ್ನೇ ಕಳೆದುಕೊಂಡು ಪಟಾಕಿ ಮುಂತಾದ ಇಡೀ ಜೀವಸಂಕುಲಕ್ಕೇ ಕಂಟಕಪ್ರಾಯವಾದ ಸಿಡಿಮದ್ದುಗಳ ಸುಡುವಿಕೆಯ ಆಡಂಬರದಲ್ಲಿ ಮುಳುಗಿಹೋಗಿದೆ. ಹೆಚ್ಚು ಸಿಡಿಮದ್ದು ಸುಟ್ಟವನದೇ ಅದ್ದೂರಿ ದೀಪಾವಳಿ ಆಚರಣೆ ಎಂಬಂತಾಗಿರುವುದು ಶೋಚನೀಯ. ಇಂಥ ಆಡಂಬರದ, ಅಂತಸ್ತಿನ ಪ್ರತೀಕದಂತಿರುವ ಹಬ್ಬಗಳೆಂದರೆ ಮೊದಲಿನಿಂದಲೂ ನನಗೆ ಅದೇನೋ ಅಸಡ್ಡೆ. ಆದರೆ ಇಂತಹ ಹಬ್ಬಗಳ ನಡುವೆಯೇ ಅಂದು ನನ್ನ ನಿದ್ರೆಗೆಡಿಸಿ, ಅಮ್ಮ- ಅಪ್ಪನ ಬೈಗುಳಕ್ಕೆ ಎಡೆಮಾಡಿದ್ದ ಹಬ್ಬ, ಸದ್ದು-ಗದ್ದಲವಿಲ್ಲದೆ, ಇಡೀ ಜೀವಸಂಕುಲದ ತಾಯಿ, ನಿಜ ದೇವತೆ ಭೂಮಿತಾಯಿಯನ್ನು ಪೂಜಿಸುವ ‘ಭೂಮಿ ಹುಣ್ಣಿಮೆ’ ಇಂದಿಗೂ ಅರ್ಥವತ್ತಾಗಿ ನಡೆಯುತ್ತಿರುವ ಹಬ್ಬ. ನಗರ ಪ್ರದೇಶದ ಅದೆಷ್ಟೋ ಜನರಿಗೆ ಅರಿವೂ ಇರದ, ಹಳ್ಳಿಗಾಡಿನ ರೈತಾಪಿ ವರ್ಗದವರು ಆಚರಿಸಿಕೊಂಡು ಬರುತ್ತಿರುವ ಪಕ್ಕಾ ಗ್ರಾಮೀಣ ಹಬ್ಬ. ಗಣೇಶನ ಹಬ್ಬವಾದ ಹೆಚ್ಚು ಕಡಿಮೆ ಒಂದು ತಿಂಗಳ ಅಂತರದಲ್ಲಿ ಬರುವ ಹುಣ್ಣಿಮೆಯಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಭೂಮಿ ಹುಣ್ಣಿಮೆಯನ್ನು ‘ಸೀಗೆ ಹುಣ್ಣಿಮೆ’ ಎಂದೂ ಕರೆಯಲಾಗುತ್ತದೆ. ಭತ್ತ, ಜೋಳ, ಅಡಿಕೆ ಮುಂತಾದ ಬೆಳೆ ತೆನೆಬಿಡುವ ಸಮಯವಿದು. ಅಂದರೆ ಬೆಳೆಗಳು ಗರ್ಭ ಧರಿಸುವ ಕಾಲ. ಅಂದರೆ ಭೂತಾಯಿಯು ಗರ್ಭವತಿಯಾಗುವ ಸುಂದರ ಗಳಿಗೆ. ಬೆಳೆಗಳನ್ನೇ ಗರ್ಭ ಧರಿಸಿದ ಭೂತಾಯಿಯೆಂಬ ಭಕ್ತಿಯಿಂದ ಪೂಜಿಸುವ ನಮ್ಮ ಹಳ್ಳಿಗರು ಭತ್ತದ ಸಸಿಗೋ ಅಥವಾ ಅಡಕೆ ಗಿಡಕ್ಕೋ ಅಥವಾ ಜೋಳದ ಗಿಡಕ್ಕೋ ಅಥವಾ ನಾವು ಬೆಳೆದ ಯಾವುದೋ ಬೆಳೆಗೋ ಸೀರೆ ಉಡಿಸಿ, ಹೂವಿನ ಹಾರ ಹಾಕಿ, ತಾಳಿಯನ್ನು ಕಟ್ಟಿ ಹೆಣ್ಣಿನಂತೆ ಸಿಂಗಾರ ಮಾಡಿ, ಹೊಲಗಳಲ್ಲಿ, ಊರುಗಳಲ್ಲಿ ಸಿಗುವ ನಾನಾ ತರದ ಸೊಪ್ಪು, ತರಕಾರಿ, ಗೆಡ್ಡೆ-ಗೆಣಸುಗಳನ್ನು ಹಿಂದಿನ ದಿನವೇ ತಂದು (ಸೊಪ್ಪು ಹೆರಕುವ ಶಾಸ್ತ್ರ ಎಂಬುದು ಅದರ ಹೆಸರು), ಇಡೀ ರಾತ್ರಿ, ಮನೆಮಂದಿಯೆಲ್ಲಾ ಎಚ್ಚರವಿದ್ದು, ಒಂದು ರೀತಿಯ ಜಾಗರಣೆಯನ್ನೇ ಆಚರಿಸಿ, ಬಗೆಬಗೆಯ ಅಡುಗೆ ಮಾಡಿ, ವಿಶೇಷವಾದ ಖಾದ್ಯ ತಯಾರಿಸಿ, ಸೂರ್ಯ ಉದಯಿಸುವ ಮುನ್ನವೇ ಮಾಡಿದ ಖಾದ್ಯ, ಪೂಜಾ ಪರಿಕರಗಳನ್ನು ತೆಗೆದುಕೊಂಡು, ಹೊಲಕ್ಕೆ ತೆರಳಿ, ಸಿಂಗರಿಸಿದ ಸಸಿಗೆ ನಾನಾತರಹದ ಖಾದ್ಯಗಳನ್ನು ಎಡೆಯಿಟ್ಟು, ಪೂಜಿಸಿ, ನಂತರ ಹೊಲದಲ್ಲಿರುವ ಬೆಳೆಗಳ ಮೇಲೆ ‘ಅಚ್ಚಂಬಲಿ’ (ಬೆಳೆಗಳ ಮೇಲೆ ಬೀರಲು ತಯಾರಿಸುವ ವಿಶೇಷ ಖಾದ್ಯ) ಬೀರುವುದರ ಮೂಲಕ ‘ಬಯಕೆ ಶಾಸ್ತ್ರವನ್ನು’ ಮಾಡುತ್ತಾರೆ. ಆಮೇಲೆ ಮನೆಮಂದಿಯೆಲ್ಲ ಹೊಲದಲ್ಲಿಯೇ ಊಟಮಾಡಿಕೊಂಡು ವಾಪಾಸಾಗುವ, ಭೂತಾಯಿಯನ್ನು ಭಕ್ತಿಪೂರ್ವಕವಾಗಿ ಪೂಜಿಸುವ ಮನಮುಟ್ಟುವ ಹಬ್ಬ . ಹೀಗೆ ಆಚರಿಸುವ ಈ ವಿಶೇಷವಾದ ಹಬ್ಬ ಮನೆ-ಮನೆಯ ಹಬ್ಬವಾಗುವುದರ ಬದಲು ಎಲ್ಲೋ ಒಂದಿಷ್ಟು ಗ್ರಾಮಗಳಿಗೆ ಸೀಮಿತವಾಗಿರುವುದು ದುರಂತ. ಬರುಬರುತ್ತಾ ಜನರಲ್ಲಿ ಕೃಷಿಯ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಾ, ಕೃಷಿ ಜಮೀನು ಕೂಡಾ ದೊಡ್ಡ ದೊಡ್ಡ ಕಟ್ಟಡಗಳಿಗೆ ಜಾಗ ಬಿಟ್ಟುಕೊಟ್ಟು, ತಮ್ಮ ವಿಸ್ತಾರವಾದ ಹರವನ್ನು ಕಳೆದುಕೊಂಡಿವೆ. ಹಿಂದಿನ ದಿನಗಳ ನಿಷ್ಠೆ ಇಂದು ಈ ಹಬ್ಬದಲ್ಲೂ ಕಡಿಮೆಯಾಗುತ್ತಿರುವುದು ಸತ್ಯ. ಆದರೆ ಇಂತಹ ವಿಶೇಷ ಮತ್ತು ಭೂತಾಯಿಯನ್ನು ಪೂಜಿಸುವ ಹಬ್ಬವು ಸರ್ವರ ಹಬ್ಬವಾಗಲಿ. ಅದರ ಜೊತೆಗೆ ಅರ್ಥ ಕಳೆದುಕೊಂಡು ಎತ್ತೆತ್ತಲೋ ಸಾಗುತ್ತಿರುವ ಉಳಿದ ಹಬ್ಬಗಳೂ ಅರ್ಥಪೂರ್ಣವಾಗಿ ಭಕ್ತಿಯ, ಸ್ನೇಹದ, ಸಂಬಂಧದ, ಬೆರೆಯುವಿಕೆಯ ಧ್ಯೋತಕವಾಗಲಿ, ಅದರ ಮೂಲಕ ವೈವಿಧ್ಯಮಯ ಸಂಸ್ಕ್ರತಿಯ ನಮ್ಮ ದೇಶ ಸಾಂಸ್ಕೃತಿಕವಾಗಿ ಎಲ್ಲೆಲ್ಲೂ ರಾರಾಜಿಸಲಿ ಎಂಬುದೊಂದೇ ಆಶಯ. ************************************

ಭೂತಾಯಿಗೆ ನಮನ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಸುಜಾತಾ ರವೀಶ್ ಅಕ್ಷರದ ಪಯಣಕ್ಕೆ ಒಂದಾಗಿ ಹೊರಡೋಣ  ಬರುವೆಯಾ ಸಂಗಾತಿ ಅಕ್ಷಯದ ಒಲವಿನ ಸುಗಮ ಸಂಪ್ರೀತಿಯನು ತರುವೆಯಾ ಸಂಗಾತಿ  ಶಬ್ದಗಳ ಮಾಲೆಯನ್ನು ಕಟ್ಟುತಾ ಹಾಕೋಣವೇ ಕನ್ನಡಮ್ಮನಿಗೆ ಹಾರ?  ಪದಗಳ ಅಡಿಪಾಯ ನೆಡಲು ಶ್ರಮದಕಲ್ಲ ಹೊರುವೆಯಾ ಸಂಗಾತಿ ಸಾಹಿತ್ಯದ ತೇರನೆಳೆಯುತ ಮುಂದಡಿ ಇಡುತಲಿ ಸಾಗೋಣವೇ?  ಸಾಂಗತ್ಯದ ಭರವಸೆ ಕೊಡುತ ಬಾಳಗಮ್ಯ ಸೇರುವೆಯಾ ಸಂಗಾತಿ    ಕುಶಲ ಕರ್ಮಿಯಂತೆ ಮಾಡೋಣ ಚಿತ್ತಾರದ  ಕುಸುರಿ ಕೆಲಸ ವಿಶಾಲ ಪುಸ್ತಕಗಳ ಆಗಸದಿ ನನ್ನೊಡನೆಯೇ  ಹಾರುವೆಯಾ ಸಂಗಾತಿ  ಅನನ್ಯವು ಕಾವ್ಯಪ್ರಪಂಚ ವಿಸ್ಮಯ ವಿನೂತನ ವಿಹಾರವಿದು ಅಮೂಲ್ಯವು ಸುಜಿಗೆ ಓದುವಿಕೆ ಕಡೆವರೆಗೂ ಇರುವೆಯಾ ಸಂಗಾತಿ  *****************************

ಗಝಲ್ Read Post »

ಕಾವ್ಯಯಾನ

ಕನ್ನಡಮ್ಮನ ಬೆಡಗು

ಕವಿತೆ ಕನ್ನಡಮ್ಮನ ಬೆಡಗು ವೀಣಾ ರಮೇಶ್ ಕರುನಾಡು ನನ್ನದುಕನ್ನಡವದೇ ಸಾಕುನನಗೆ ಬಿರುದುಸಂಸ್ಕೃತಿಯ ತವರಿದುಹಸಿರು ಸಿರಿಯಶೃಂಗಾರದಲಿ ಬಿರಿದು ಧೀರ ಶರಧಿಯ ಬಗೆದುಕವಿಶ್ರೇಷ್ಠ ರ ಆಗೆದುಸಾಹಿತ್ಯ ಶಿಖರದನೆತ್ತಿಯಲಿ ಇಳಿದುಹರಿಸಿದಳು ಅಕ್ಷರಧಾರೆಮೊಗೆ ಮೊಗೆದು ಮಲೆನಾಡ ಕಾಡಲ್ಲಿಕಂಗೊಳಿಸಿದ ಸುಂದರಿರಸಋಷಿಗೆ ಜ್ಞಾನಪೀಠದಹೆಮ್ಮೆಯ ಗರಿನಾಲ್ಕು ತಂತಿಗಳಲಿಮೀಟಿದ ನಾದಲಹರಿನಮ್ಮ ವರಕವಿ ಶಿಲ್ಪಕಲೆ,ಬೇಲೂರು ಹಳೇಬೀಡಿನ ಬೆಡಗುರಾಜ ವೈಭೋಗದಮೈಸೂರಿನ ಸೊಬಗುಹಂಪಿಯ ಸುವರ್ಣ ಯುಗ ಕನ್ನಡಾಂಬೆಯಮೆರುಗು. ಯಕ್ಷ ಪ್ರೇಮಿಗಳ ಹೃದಯದಲಿಯಕ್ಷಗಾನದ ಹೆಜ್ಜೆಗಳಲಿಮದ್ದಳೆಯ ಸದ್ದಲ್ಲಿಕುಣಿಯಿತು ಯಕ್ಷಗಾನಕಾರಂತರ ಹೆಜ್ಜೆಗಳಲಿ ಎಲ್ಲೆಲ್ಲೂಮೊಳಗಲಿ ನಿನ್ನ ಕಹಳೆಸಮರಸದ ಸಹಬಾಳ್ವೆಬೆಳಗಲಿ ,ಹರಡಲಿಕನ್ನಡ ದೇವಿಯಪ್ರಭಾವಳಿ **********

ಕನ್ನಡಮ್ಮನ ಬೆಡಗು Read Post »

ಇತರೆ

ಉಪಯೋಗಿಸೋಣ, ಉಳಿಯೋಣ

ಲೇಖನ ಉಪಯೋಗಿಸೋಣ, ಉಳಿಯೋಣ ಶಾಂತಿವಾಸು ನಮ್ಮ ದೇಶದ ಪ್ರತಿ ರಾಜ್ಯವೂ ಅದರದೇ ಆದ ವೈಶಿಷ್ಟ್ಯ ಹಾಗೂ ಹಲವಾರು ಪದ್ಧತಿಯ ಆಚರಣೆಗಳು ಇರುವಂತೆ ನಮ್ಮ ಕರ್ನಾಟಕದ ನೆಲದ ಮೇಲಿನ ಪ್ರತಿಯೊಂದು ಪಂಗಡಗಳಿಗೆ, ಜಾತಿಗಳಿಗೆ, ಪ್ರಾಣಿಗಳು, ಜಾನುವಾರುಗಳಿಗೆ, ವಸ್ತುಗಳಿಗೆ ಹೀಗೆ ಎಲ್ಲಕ್ಕೂ ಪ್ರತ್ಯೇಕ ಹಬ್ಬಗಳಿವೆ. ಬೇರೆ ಬೇರೆ ಪ್ರದೇಶಗಳು ಹಾಗೂ ರಾಜ್ಯಗಳಿಂದ ಜೀವನವನ್ನರಸಿ ಬಂದು ನೆಲೆ ಕಂಡುಕೊಂಡ ಲಕ್ಷಾಂತರ ಜನರ ನೆಮ್ಮದಿಯ ನಮ್ಮ ಕರುನಾಡು, ಬಂದವರು ನಮ್ಮವರೇ ಎನ್ನುವ ಔದಾರ್ಯ ಮೆರೆದು, “ಬದುಕು, ಬದುಕಲು ಬಿಡು” ಸಂಸ್ಕೃತಿಯನ್ನು ಮೈಗೂಡಿಸಿಕೊಂಡ ವಿಭಿನ್ನ ಸಂಪ್ರದಾಯವನ್ನಪ್ಪಿದ ಹೃದಯವಂತರ ನೆಲೆಬೀಡು. ಎರಡು ಸಾವಿರ ವರ್ಷಗಳಷ್ಟು ಹಳೆಯ ಭಾಷೆ ಹಾಗೂ ಸಂಸ್ಕೃತಿಯ ಬುನಾದಿ ಹೊಂದಿದ ನಮ್ಮ ಕನ್ನಡ ಭಾಷೆಯು ಸಾಮಾನ್ಯವಾಗಿ ಅಲುಗಾಡಿಸಲಾರದಷ್ಟು ಭದ್ರವಾಗಿದೆ ಎನ್ನುವುದು ಅತಿಶಯೋಕ್ತಿ ಎನಿಸುವುದಿಲ್ಲ. 65ನೇ ಕನ್ನಡ ರಾಜ್ಯೋತ್ಸವದ ಈ ಸಂದರ್ಭದಲ್ಲಿ ನಾವು ನಮ್ಮ ಕರ್ನಾಟಕವು ಕಂಡ ಮೊದಲುಗಳ ಕಡೆ ಗಮನ ಹರಿಸದಿದ್ದರೆ ಅದು ಕನ್ನಡವನ್ನೇ ಕಡೆಗಣಿಸಿದಂತೆ ಎಂದು ನನ್ನ ಭಾವನೆ. ಏಕೆಂದರೆ ಶತಶತಮಾನಗಳಿಂದ ಒಂದೊಂದೇ ಹೆಜ್ಜೆಯಿಟ್ಟು ಲೋಕವೇ ಕರ್ನಾಟಕದತ್ತ ಹೆಮ್ಮೆಯಿಂದ ತಿರುಗಿ ನೋಡುವಂತೆ ಮಾಡಿರುವುದರಲ್ಲಿ ಹಾಗೂ ಕರ್ನಾಟಕಕ್ಕೆ ಒಂದು ಪ್ರತ್ಯೇಕ ಸ್ಥಾನವನ್ನು ಗಟ್ಟಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇಂಥ ಮೊದಲುಗಳೊಂದಿಗೆ ಕರ್ನಾಟಕ ಕನ್ನಡ ಭಾಷಾ ಸಾಹಿತ್ಯವನ್ನು ಉತ್ತುಂಗಕ್ಕೇರಿಸಿದ ಮಹನೀಯರ ಹಾಗೂ ಅವರ ಗ್ರಂಥಗಳ ಹೆಸರು, ಸಾಧನೆಗಳ ದೊಡ್ಡ ಪಟ್ಟಿಯೇ ಇದೆ.   1. ಕನ್ನಡದ ಮೊದಲ ದೊರೆ -ಮಯೂರವರ್ಮ 2. ಕನ್ನಡದ ಮೊದಲ ಕವಿ -ಪಂಪ 3. ಕನ್ನಡದ ಮೊದಲ ಶಾಸನ – ಹಲ್ಮಿಡಿ ಶಾಸನ 4. ಕನ್ನಡದ ತ್ರಿಪದಿ ಛಂದಸ್ಸಿನ ಮೊದಲ ಬಳಕೆ – ಬಾದಾಮಿಯ ಕಪ್ಪೆ ಅರಭಟ್ಟನ ಶಾಸನ 5. ಕನ್ನಡದ ಮೊದಲ ಲಕ್ಷಣ ಗ್ರಂಥ – ಕವಿರಾಜಮಾರ್ಗ 6. ಕನ್ನಡದ ಮೊದಲ ನಾಟಕ – ಮಿತ್ರವಿಂದ ಗೋವಿಂದ 7. ಕನ್ನಡದ ಮೊದಲ ಮಹಮ್ಮದೀಯ ಕವಿ – ಶಿಶು ಸಂತ ಶಿಶುನಾಳ ಶರೀಫ 8. ಕನ್ನಡದ ಮೊದಲ ಕವಿಯತ್ರಿ – ಅಕ್ಕಮಹಾದೇವಿ 9. ಕನ್ನಡದ ಮೊದಲ ಸ್ವತಂತ್ರ  ಸಾಮಾಜಿಕ ಕಾದಂಬರಿ – ಇಂದಿರಾಬಾಯಿ 10. ಕನ್ನಡದ ಮೊದಲ ಪತ್ತೇದಾರಿ ಕಾದಂಬರಿ – ಚೋರಗ್ರಹಣ ತಂತ್ರ 11.ಕನ್ನಡದ ಮೊದಲ ಛಂದೋಗ್ರಂಥ – ಛಂದೋಂಬುದಿ (ನಾಗವರ್ಮ) 12. ಕನ್ನಡದ ಮೊದಲ ಸಾಮಾಜಿಕ ನಾಟಕ – ಇಗ್ಗಪ್ಪ ಹೆಗ್ಗಡೆಯ ವಿವಾಹ ಪ್ರಹಸನ 13. ಕನ್ನಡದ ಮೊದಲ ಜ್ಯೋತಿಷ್ಯ ಗ್ರಂಥ – ಜಾತಕ ತಿಲಕ 14. ಕನ್ನಡದ ಮೊದಲ ಗಣಿತಶಾಸ್ತ್ರ ಗ್ರಂಥ – ವ್ಯವಹಾರ ಗಣಿತ 15. ಕನ್ನಡದ ಮೊದಲ ಕಾವ್ಯ- ಆದಿಪುರಾಣ 16. ಕನ್ನಡದ ಮೊದಲ ಕಾವ್ಯ – ವಡ್ಡಾರಾಧನೆ 17. ಕನ್ನಡದಲ್ಲಿ ಮೊದಲು ಅಚ್ಚಾದ ಕೃತಿ – ಗ್ರಾಮರ್ ಆಫ್ ದಿ ಕನ್ನಡ ಲ್ಯಾಂಗ್ವೇಜ್ 18. ಕನ್ನಡದ ಮೊದಲ ಪತ್ರಿಕೆ – ಮಂಗಳೂರ ಸಮಾಚಾರ 19. ಹೊಸಗನ್ನಡದ ಶಬ್ದವನ್ನು ಮೊದಲು ಬಳಸಿದವರು – ಚಂದ್ರರಾಜ 20. ಕನ್ನಡದಲ್ಲಿ ಮೊದಲು ಕಥೆ ಬರೆದವರು – ಪಂಜೆ ಮಂಗೇಶರಾಯರು 21. ಕನ್ನಡದ ಮೊದಲ ಪ್ರೇಮ ಗೀತೆಗಳ ಸಂಕಲನ – ಒಲುಮೆ 22. ಕನ್ನಡ ಸಾಹಿತ್ಯ ಪರಿಷತ್ತಿನ ಮೊದಲ ಅಧ್ಯಕ್ಷರು – ಎಚ್. ವಿ. ನಂಜುಂಡಯ್ಯ 23. ಕನ್ನಡದ ಮೊದಲ ಸ್ನಾತಕೋತ್ತರ ಪದವೀಧರ – ಆರ್. ನರಸಿಂಹಾಚಾರ್ 24. ಕನ್ನಡದ ಮೊದಲ ವಚನಕಾರರು –  ದೇವರ ದಾಸಿಮಯ್ಯ 25. ಹೊಸಗನ್ನಡದ ಮೊದಲ ಮಹಾಕಾವ್ಯ – ಶ್ರೀ ರಾಮಾಯಣ ದರ್ಶನಂ 26. ಪಂಪ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ – ಕುವೆಂಪು 27. ಕನ್ನಡದ ಮೊದಲ ಕನ್ನಡ ಇಂಗ್ಲಿಷ್ ನಿಘಂಟು ರಚಿಸಿದವರು – ಆರ್. ಎಫ್. ಕಿಟೆಲ್ 28. ಕರ್ನಾಟಕದ ಮೊಟ್ಟ ಮೊದಲ ಸಂಕಲನ ಗ್ರಂಥ – ಸೂಕ್ತಿ ಸುಧಾರ್ಣವ 29.  ಮೊದಲ ಅಖಿಲ ಭಾರತ ಸಾಹಿತ್ಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆದ ಸ್ಥಳ – ಬೆಂಗಳೂರು (1915) 30. ಕರ್ನಾಟಕ ರತ್ನ ಪ್ರಶಸ್ತಿ ಪಡೆದ ಮೊದಲ ಕವಿ – ಕುವೆಂಪು 31. ಕನ್ನಡದ ಮೊದಲ ವಿಶ್ವಕೋಶ – ವಿವೇಕ ಚಿಂತಾಮಣಿ 32. ಕನ್ನಡದ ಮೊದಲ ವೈದ್ಯ ಗ್ರಂಥ – ಗೋವೈದ್ಯ 33. ಕನ್ನಡದ ಮೊದಲ ಪ್ರಾಧ್ಯಾಪಕರು – ಟಿ.ಎಸ್ .ವೆಂಕಣ್ಣಯ್ಯ 34. ಕನ್ನಡದಲ್ಲಿ ರಚಿತಗೊಂಡ ಮೊದಲ ರಗಳೆ – ಮಂದಾನಿಲ ರಗಳೆ 35. ಕನ್ನಡದ ಮೊದಲ ಹಾಸ್ಯ ಪತ್ರಿಕೆ – ವಿಕಟ ಪ್ರತಾಪ 36. ಕನ್ನಡದ ಮೊದಲ ವೀರಗಲ್ಲು ಶಾಸನ – ತಮ್ಮಟಗಲ್ಲು ಶಾಸನ 37. ಕನ್ನಡದ ಮೊದಲ ಹಾಸ್ಯ ಲೇಖಕಿ –  ಟಿ .ಸುನಂದಮ್ಮ ಜ್ಞಾನಪೀಠ ಪ್ರಶಸ್ತಿ ಪಡೆದು, ಕನ್ನಡದ ಹೆಸರನ್ನು ಉತ್ತುಂಗಕ್ಕೇರಿಸಿದ  ಮಹನೀಯರು 1. ಕುವೆಂಪು, 2. ದ.ರಾ. ಬೇಂದ್ರೆ 3. ಶಿವರಾಮ ಕಾರಂತರು 4.ಮಾಸ್ತಿ ವೆಂಕಟೇಶ ಅಯ್ಯಂಗಾರ್ 5.ವಿ.ಕೃ. ಗೋಕಾಕರು 6. ಯು. ಆರ್. ಅನಂತಮೂರ್ತಿ 7. ಗಿರೀಶ್ ಕಾರ್ನಾಡರು 8. ಚಂದ್ರಶೇಖರ ಕಂಬಾರರು        ಇಷ್ಟು ಭವ್ಯತೆಯನ್ನು ಹೊಂದಿರುವ ನಮ್ಮ ಕರ್ನಾಟಕವು 1956 ರ ನವಂಬರ್ ಒಂದರಂದು ಮೈಸೂರು ರಾಜ್ಯ ಹೆಸರಿನಲ್ಲಿ ಮೊದಲಿಗೆ ನಿರ್ಮಾಣವಾಯಿತು. ರಾಜ್ಯಗಳ ಪುನರ್ ವಿಂಗಡಣೆ ಕಾಯಿದೆಯ ಮೇರೆಗೆ ಜನ್ಮತಾಳಿದ ನವ ರಾಜ್ಯವು ಕೇವಲ ಕರ್ನಾಟಕ ಕನ್ನಡ ಭಾಷಾ ಪ್ರದೇಶಗಳ ಒಂದುಗೂಡಿಕೆಯಾಗಿ ಮಾತ್ರ ಇರಲಿಲ್ಲ. ಬದಲಿಗೆ ಸುಮಾರು 2000 ವರ್ಷಗಳ ಉಜ್ವಲ ಇತಿಹಾಸ, ಪರಂಪರೆ ಹಾಗೂ ಸಂಸ್ಕೃತಿಯುಳ್ಳ ಕರ್ನಾಟಕ ನೆಲದಲ್ಲಿ ಜನ್ಮ ತಾಳಿದ ಕೋಟ್ಯಾಂತರ ಕನ್ನಡ ಜನತೆಯ ಹೃದಯವನ್ನು ಒಗ್ಗೂಡಿಸಿದ ದಿನವಿದು.        ಮೈಸೂರು  ರಾಜ್ಯವನ್ನೇ ಕರ್ನಾಟಕವೆಂದು ಕರೆಯಬೇಕೆಂಬ ಚರ್ಚೆಯು 1972 ರಲ್ಲಿ ಆರಂಭವಾದ ಇತಿಹಾಸವನ್ನು ಕೆದಕಿದರೆ, ಕರ್ನಾಟಕವೆಂಬ ಹೆಸರು ಮಹಾಭಾರತದಲ್ಲಿ ಉಲ್ಲೇಖವಿರುವ ದಾಖಲೆಯಿದೆ. ಅಂತೆಯೇ ಕ್ರಿ.ಶ. 450 ರಲ್ಲಿ ದಕ್ಷಿಣದಲ್ಲಿ ಆಳಿದ ಗಂಗ ಅರಸರ ಸಾಮ್ರಾಜ್ಯವು ಕರ್ನಾಟಕವೆಂದೇ ಹೆಸರಾಗಿದ್ದರೆ, ವಿಜಯನಗರ ಅರಸರು ಕರ್ನಾಟ ದೊರೆಗಳೆಂದು ಕರೆಯಲ್ಪಟ್ಟಿದ್ದಾರೆ. ಕನ್ನಾಡು, ಕರ್ನಾಟ ಎಂದು ಕೊನೆಗೆ “ಕರ್ನಾಟಕ”ವೆಂದು ಕರೆಯುವುದು ರೂಢಿಗೆ ಬಂದಿದೆ. ಕರ್ನಾಟಕತ್ವವೆಂದರೆ ಕೇವಲ ದೇಶಾಭಿಮಾನವೋ, ಭಾಷಾಭಿಮಾನವೋ ಅಥವಾ ಇತಿಹಾಸ ಅಭಿಮಾನವೋ ಅಲ್ಲದೆ ಮೂರು ಅಡಗಿರುವ ರಾಷ್ಟ್ರೀಯತೆಯನ್ನು ಒಪ್ಪಿ ಅಪ್ಪಿರುವ ತತ್ವವಾಗಿದೆ. 19 ಜಿಲ್ಲೆಗಳಾಗಿ ಹರಿದು ಹಂಚಿಹೋಗಿದ್ದ ಕರ್ನಾಟಕವನ್ನು ಏಕೀಕರಣಗೊಳಿಸುವ ನಿಟ್ಟಿನಲ್ಲಿ 1905 ರಿಂದ 1920 ರ ಅವಧಿಯಲ್ಲಿ ದೇಶದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಾಲಿಟ್ಟ ಕಾರ್ಯಕರ್ತರನ್ನು ಕನ್ನಡ ರಾಜ್ಯೋತ್ಸವ ಸಂಭ್ರಮಿಸುವ ಈ ಸಮಯದಲ್ಲಿ ನೆನೆಯುವುದು ಸರ್ವಸಮ್ಮತವಾಗಿದೆ. ಕರ್ನಾಟಕ ಏಕೀಕರಣಕ್ಕಾಗಿ ದನಿಯೆತ್ತಿದವರಲ್ಲಿ ಬೆನಗಲ್ ರಾಮರಾಯರು, ಆಲೂರು ವೆಂಕಟರಾಯರು, ಕಡಪ ರಾಘವೇಂದ್ರ ರಾವ್, ಮುದವೀಡು ಕೃಷ್ಣ ರಾವ್, ಗಂಗಾಧರ್ ರಾವ್ ದೇಶಪಾಂಡೆ, ಕೆ.ಸಿ. ರೆಡ್ಡಿ, ಕೆಂಗಲ್ ಹನುಮಂತರಾರು, ನಿಜಲಿಂಗಪ್ಪನವರು ಪ್ರಮುಖರೆನಿಸಿಕೊಂಡಿದ್ದಾರೆ. ಆಗ ನಮ್ಮ ಕರ್ನಾಟಕದ ಹಲವಾರು ಭಾಗಗಳು ಹೈದರಾಬಾದ್, ಮುಂಬೈ, ಮದ್ರಾಸು, ಡೆಲ್ಲಿ ಹಾಗೂ ಹಳೆ ಮೈಸೂರು ರಾಜ್ಯಗಳಿಗೆ ಸೇರಿಕೊಂಡಿದ್ದರೆ, ನೀಲಗಿರಿ, ಕೃಷ್ಣಗಿರಿ, ಅನಂತಪುರದ ಮಡಕಸಿರಾ ತಾಲ್ಲೂಕು, ಮಧೋಳ, ಸೊಂಡೂರು, ರಾಮದುರ್ಗ, ಜಮಖಂಡಿ, ಕೊಲ್ಲಾಪುರ ಇವೇ ಮೊದಲಾದ ಭಾಗಗಳು ಕರ್ನಾಟಕಕ್ಕೆ ಸೇರಿದ್ದವು. 1905 ರಲ್ಲಿ ಧಾರವಾಡದಲ್ಲಿ ನಡೆದ ಗ್ರಂಥಕರ್ತರ ಸಮ್ಮೇಳನದಲ್ಲಿ ಬೆನಗಲ್ ರಾಮರಾಯರು ಕರ್ನಾಟಕದ ಏಕೀಕರಣದ ಬಗ್ಗೆ ಭಾಷಣ ಮಾಡಿ ಮಾತನಾಡಿದ್ದು ಕರ್ನಾಟಕವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಇಟ್ಟ ಮೊದಲ ಹೆಜ್ಜೆ ಎಂದು ಹೇಳಲಾಗಿದೆ. 1905 ರಲ್ಲಿ ಲಾರ್ಡ್ ಕರ್ಜನ್ ಬಂಗಾಳವನ್ನು ವಿಭಜಿಸಲು ಯತ್ನಿಸಿದಾಗ ಬಂಗಾಳಿಯರು ಪ್ರತಿಭಟಿಸಿದ್ದನ್ನು ಸ್ಪೂರ್ತಿಯಾಗಿಸಿಕೊಂಡ ಆಲೂರು ವೆಂಕಟರಾಯರು ಕರ್ನಾಟಕದ ಏಕೀಕರಣದ ಮೊದಲನೇ ದನಿಯೆತ್ತಿದರು. ಏಕೀಕರಣದ ಅವಶ್ಯಕತೆಯನ್ನು ಮನದಟ್ಟು ಮಾಡುವ ನಿಟ್ಟಿನಲ್ಲಿ 1920 ರಲ್ಲಿ ನಾಗಪುರದಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಸುಮಾರು 800 ಕಾಂಗ್ರೆಸ್ ಪ್ರತಿನಿಧಿಗಳು ಕರ್ನಾಟಕದಿಂದ ತೆರಳಿದ್ದು ದಿನದಿಂದ ದಿನಕ್ಕೆ ಏಕೀಕರಣದ ಹೋರಾಟ ಹೆಚ್ಚಾಗುತ್ತಿದ್ದುದಕ್ಕೆ ಸಾಕ್ಷಿಯಾಗಿದೆ. 1924 ರಲ್ಲಿ ಬೆಳಗಾವಿಯಲ್ಲಿ ನಡೆದ, ಗಾಂಧೀಜಿಯವರು ಅಧ್ಯಕ್ಷರಾಗಿದ್ದ ಕಾಂಗ್ರೆಸ್ ಸಮ್ಮೇಳನದಲ್ಲಿಯೂ ಸಹ ಕರ್ನಾಟಕ ಏಕೀಕರಣ ಸಮ್ಮೇಳನವು ನಡೆಯಿತು. ಕರ್ನಾಟಕವನ್ನು ಏಕೀಕರಣಗೊಳಿಸುವ ನಿಟ್ಟಿನಲ್ಲಿ 1926ರಿಂದ 46 ರವರೆಗೂ ಸತತವಾಗಿ ಹಲವಾರು ಸಮ್ಮೇಳನಗಳು ನಡೆಯುತ್ತಲೇ ಇದ್ದವು. ಕರ್ನಾಟಕದ ಏಕೀಕರಣದ ಅವಶ್ಯಕತೆಯನ್ನು ಅರಿತ ಅಂದಿನ ಕಾಂಗ್ರೆಸ್ ಪಕ್ಷವು ಹೋರಾಟಕ್ಕೆ ಬೆಂಬಲ ನೀಡಿತು. ಅದನ್ನು ಮೈಸೂರ್ ಕಾಂಗ್ರೆಸ್ ಸಹ ಪುರಸ್ಕರಿಸಿತು. 1946 ರಲ್ಲಿ ಕರ್ನಾಟಕ ಮಹಾಸಭೆಯು ಏಕೀಕರಣದ ಮಂತ್ರವನ್ನು ಪುನರುಚ್ಚರಿಸಿತು. 1953 ರಲ್ಲಿ ಭಾಷಾವಾರು ರಾಜ್ಯವಾಗಿ ಆಂಧ್ರವು ಪ್ರಥಮ ಬಾರಿಗೆ ರೂಪುಗೊಂಡರೆ, ಅದೇ ವರ್ಷ ಹೈದರಾಬಾದಿನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಕೆಂಗಲ್ ಹನುಮಂತರಾಯರು ಒತ್ತಾಯಪೂರ್ವಕವಾಗಿ ಏಕೀಕರಣದ ಭಾಷಣ ಮಾಡಿದರು. ಅಂದಿನ ಕೆ.ಪಿ.ಸಿ.ಸಿ ಅಧ್ಯಕ್ಷರಾದ ನಿಜಲಿಂಗಪ್ಪನವರು ಕೂಡ ಅದೇ ಮಂತ್ರವನ್ನು ಜಪಿಸುವುದರೊಂದಿಗೆ ಅಹೋರಾತ್ರಿ ಶ್ರಮಿಸಿದರು. ಅನೇಕ ಭಾಷಣಗಳು, ಮನವೊಲಿಕೆಗಳು ಫಲಕೊಡದಿದ್ದಾಗ 1953 ರಲ್ಲಿ ದಾವಣಗೆರೆಯಲ್ಲಿ ಸತ್ಯಾಗ್ರಹವು ಸಹ ನಡೆಯಿತು. ಹಂತಹಂತವಾಗಿ ಒಗ್ಗಟ್ಟನ್ನು  ಸಾರುತ್ತ ಏಕೀಕರಣದ ಅಗತ್ಯವನ್ನು ಮನದಟ್ಟು ಮಾಡುವಲ್ಲಿ ವರ್ಷಗಟ್ಟಲೆ ಹೋರಾಡಿದ ಫಲವಾಗಿ 1956 ರ ನವೆಂಬರ್ ಒಂದರಂದು ಏಕೀಕೃತ ರಾಜ್ಯ, ಅದು ನಮ್ಮ ಕರ್ನಾಟಕ ರಾಜ್ಯದ ಉದಯವಾಯಿತು. ಕರ್ನಾಟಕ ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ರೂಪುಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು. ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ “ಮೈಸೂರು” ಹೆಸರನ್ನು ಉಳಿಸಿಕೊಂಡರು. ಆದರೆ ಉತ್ತರ ಕರ್ನಾಟಕದ ಜನರ ತತ್ವ ಮಾನ್ಯತೆಗಾಗಿ ರಾಜ್ಯದ ಹೆಸರು 1972ರಲ್ಲಿ “ಕರ್ನಾಟಕ” ಎಂದು ಬದಲಾಯಿತು. ಈ ಸಂದರ್ಭದಲ್ಲಿ ದೇವರಾಜ್ ಅರಸುರವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಕರ್ನಾಟಕದ ಏಕೀಕರಣದ ಹೋರಾಟದಲ್ಲಿ ಮುಂದಿನ ಪೀಳಿಗೆಯಾಗಿ ನಡೆಸಿದ ಹೋರಾಟದಲ್ಲಿ ಶಿವರಾಮ ಕಾರಂತರು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಎ.ಎನ್. ಕೃಷ್ಣರಾವ್ ಮತ್ತು ಬಿ. ಎಂ. ಶ್ರೀಕಂಠಯ್ಯನವರ ಹೆಸರುಗಳಿವೆ. ಕೆಲವು ಕಾರಣಗಳಿಂದ ಕಾಸರಗೋಡು, ತಾಳವಾಡಿ, ಮಡಕಶಿರಾ, ಅಕ್ಕಲಕೋಟೆ, ಸೊಲ್ಲಾಪುರ, ಹೊಸೂರು ಇವೆಲ್ಲವೂ ಏಕೀಕೃತ ಕರ್ನಾಟಕದಿಂದ ಹೊರಗುಳಿದರೆ, 1565 ರಲ್ಲಿ ಒಡೆದು ಹೋಗಿದ್ದ ವಿಜಯನಗರ ಸಾಮ್ರಾಜ್ಯವು ಕರ್ನಾಟಕದ ನಕ್ಷೆಯಲ್ಲಿ ಸ್ಥಾನ ಪಡೆಯಿತು. ಕರ್ನಾಟಕದ ಗಡಿರೇಖೆಗಳು ಕಾರಣಾಂತರದಿಂದ ಕೆಲವು ಬಾರಿ ಹಿಗ್ಗಿ, ಕೆಲವು ಬಾರಿ ಕುಗ್ಗಿ ಹಲವು ಕಾರಣಗಳಿಂದ ನೆರೆ ರಾಜ್ಯಗಳಲ್ಲಿ ಹಂಚಿಹೋಗಿದ್ದ ಪ್ರದೇಶಗಳನ್ನು ಭೌಗೋಳಿಕವಾಗಿ ಹಾಗೂ ಮಾನಸಿಕವಾಗಿ ಬೆಸೆಯಲು ಯತ್ನಿಸಿದ ಅನೇಕ ಮಹನೀಯರು ಅಡ್ಡಬಂದ ಅನೇಕ ಎಡರು ತೊಡರುಗಳನ್ನು ಲೆಕ್ಕಿಸದೆ, ಕರ್ನಾಟಕದ ಏಕೀಕರಣಕ್ಕಾಗಿ ಚಳುವಳಿಗಳನ್ನು ನಡೆಸಿ ಅಖಂಡ ಕರ್ನಾಟಕವನ್ನು ನಮಗೆ ಉಡುಗೊರೆಯಾಗಿ ನೀಡಿದ ಈ ದಿನವೇ ನಮ್ಮ “ಕರ್ನಾಟಕ ರಾಜ್ಯೋತ್ಸವ” ಅಥವಾ “ಕನ್ನಡ ರಾಜ್ಯೋತ್ಸವ”. ಭಾಷಾ ನೀತಿಯಲ್ಲಿ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ ಹಾಗೂ ತ್ರಿಭಾಷಾ ಸೂತ್ರದಡಿಯಲ್ಲಿ ಕರ್ನಾಟಕದ ಶಾಲೆಗಳಲ್ಲಿ ಕನ್ನಡವನ್ನು ಮುಖ್ಯ ಭಾಷೆಯಾಗಿ ಪರಿಗಣಿಸಬೇಕೆಂಬ ವಿ.ಕೃ. ಗೋಕಾಕರು ರಚಿಸಿದ ವರದಿಯ ಬೇಡಿಕೆಯನ್ನು ಮುಂದಿಟ್ಟು ನಡೆದ “ಗೋಕಾಕ್ ಚಳುವಳಿಯಲ್ಲಿ” ಕನ್ನಡದ ಮೇರು ನಟ ಡಾಕ್ಟರ್ ರಾಜಕುಮಾರರ ಹೆಸರು ಮುಂಚೂಣಿಯಲ್ಲಿ ನಿಲ್ಲುತ್ತದೆ. ಹೀಗೆ ಕನ್ನಡವನ್ನು ಉಸಿರಾಡಿ, ಕನ್ನಡವೆಂಬ ಹೆಮ್ಮೆಯ ಕಿರೀಟವನ್ನು ನಮಗೆ ಬಿಟ್ಟು ಹೋದ ಮಹನೀಯರನ್ನು ನೆನೆಯುವುದು “ಕನ್ನಡ ರಾಜ್ಯದ ನಿಜವಾದ ಉತ್ಸವ” ಎನ್ನುವುದು ನನ್ನ ಅನಿಸಿಕೆ. ಈ ಮೇಲೆ ಹೆಸರಿಸಿರುವ, ಹೋರಾಡಿರುವ ಎಲ್ಲ ಮಹನೀಯರೂ ಕನ್ನಡವನ್ನು ಉಪಯೋಗಿಸಿದ್ದರಿಂದಲೇ ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ಮಾನಸಿಕವಾಗಿ ಉಳಿದುಕೊಂಡಿದ್ದಾರೆ. ಭೂಮಿಯ ಮೇಲಿನ ಪ್ರತಿಯೊಂದಕ್ಕೂ ನಾಶವಿದೆ ಆದರೆ ಭಾಷೆಗಿಲ್ಲ. ಈ ನಿಟ್ಟಿನಲ್ಲಿ ಕನ್ನಡವನ್ನು ಆಸ್ವಾದಿಸಿ, ಅನುಭವಿಸಿ, ಭಾವನೆಗಳನ್ನು ಕನ್ನಡದಲ್ಲಿಯೇ ಪ್ರಕಟಿಸಿದ

ಉಪಯೋಗಿಸೋಣ, ಉಳಿಯೋಣ Read Post »

ನಿಮ್ಮೊಂದಿಗೆ

ರಾಜ್ಯೋತ್ಸವದ ಶುಭಾಶಯಗಳು

ಪ್ರಿಯರೆ, ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಿದ್ದೇವೆ.‌ ಕರ್ನಾಟಕ ಹಾಗೂ ಅದಕ್ಕೂ ಮೊದಲು ವಿಶಾಲ ಮೈಸೂರು ಎಂಬ ಹೆಸರು ಮತ್ತು ಒಗ್ಗೂಡುವಿಕೆಯ ಹಿಂದಿನ ಇತಿಹಾಸ ಅರಿಯುವುದು ಲೇಖಕರಾದ ನಮ್ಮೆಲ್ಲರ ಹೊಣೆ.‌ ೧೯೦೫ ರಿಂದ ೧೯೨೦ ರ ಸಮಯದಲ್ಲಿ ಕನ್ನಡ ಮಾತಾಡುವ ಪ್ರದೇಶದ ಒಗ್ಗೂಡುವಿಕೆಯ ಹೋರಾಟ ಸಹ ಆರಂಭವಾಯಿತು. ಕರ್ನಾಟಕ ವಿದ್ಯಾವರ್ದಕ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ತನ ಹೋರಾಟವೂ ಕನ್ನಡ ಮಾತಾಡುವ ಪ್ರದೇಶಗಳ ಒಗ್ಗೂಡಿಸುವಿಕೆಯಲ್ಲಿದೆ. ಮದ್ರಾಸ್ , ಹೈದರಾಬಾದ್, ಮುಂಬಯಿ ಪ್ರಾಂತಗಳಲ್ಲಿ ಹರಿದು ಹಂಚಿ ಹೋಗಿದ್ದ ಕನ್ನಡ ನಾಡು ಒಗ್ಗೂಡುವಿಕೆಯಲ್ಲಿ ಆಲೂರು ವೆಂಕಟರಾಯರು, ರಾ.ಲ.ದೇಶಪಾಂಡೆ ಅವರ ಹೋರಾಟ ದೊಡ್ಡದು. ೧೯೫೬ ನವ್ಹಂಬರ್ ೧ ಹಾಗೂ ೧೯೭೩ ನವ್ಹಂಬರ್ ೧ ಕನ್ನಡಿಗರ ಪಾಲಿಗೆ ಮಹತ್ವದ ದಿನಗಳು. ನಿಜಲಿಂಗಪ್ಪ ಮತ್ತು ದೇವರಾಜ ಅರಸು ಅವರನ್ನು ಈ ಸಂದರ್ಭದಲ್ಲಿ ನೆನೆಯಬೇಕು. ಇವತ್ತು ಕನ್ನಡ ,ಕರ್ನಾಟಕ ಸಮಸ್ಯೆ ಎದುರಿಸುತ್ತಿವೆ. ಕೋವಿಡ್ ಜೊತೆಗೆ ಕೇಂದ್ರದ ಏಕಪಕ್ಷೀಯ ಧೋರಣೆ ಕರ್ನಾಟಕವನ್ನು ಸಂಕಟಕ್ಕೆ ದೂಡಿದೆ.‌ಇದರ ವಿರುದ್ಧ ಧ್ವನಿ ಎತ್ತಲು ರಾಜಕೀಯ ಶಕ್ತಿಗಳ ಜೊತೆ ಬರಹಗಾರರು ನಿಲ್ಲಬೇಕು. ಪ್ರಬಲ ರಾಜಕೀಯ ಪಕ್ಷದ ಜೊತೆ ನಿಂತಿರುವ, ಆತ್ಮಸಾಕ್ಷಿಯ ಮಾರಿಕೊಂಡ ಅಕ್ಷರ ಲೋಕವೂ ನಮ್ಮ ಕಣ್ಣ ಮುಂದಿದೆ ‌ . ಇಂತಹ ಸನ್ನಿವೇಶದಲ್ಲಿ ಬರಹಗಾರ ವಿರೋಧ ಪಕ್ಷವಾಗಿ , ಜನರ ಧ್ವನಿಯಾಗಿ ನಿಲ್ಲಬೇಕು. ಕನಿಷ್ಟ ಪಕ್ಷ ಕನ್ನಡ ಸಾಹಿತ್ಯ ಪರಂಪರೆಯ ಅರ್ಥಮಾಡಿಕೊಂಡರು, ಅಲ್ಲಿನ ಪ್ರತಿಭಟನೆ, ಅನ್ಯಾಯದ ವಿರುದ್ಧ ಸೆಟೆದು ನಿಲ್ಲುವ ಗುಣ ಬರಹಗಾರರಿಗೆ ಬೇಕು. ಆ ಗುಣ ಸಂಗಾತಿ ಜೊತೆ ಇರುವ ಲೇಖಕಿ/ಲೇಖಕರದಾಗಲಿ ಎಂದು ಬಯಸುತ್ತದೆ. ರಾಜ್ಯೋತ್ಸವ ಶುಭಾಶಯಗಳೊಂದಿಗೆ ಸಂಗಾತಿ ಸಂಪಾದಕ ಬಳಗ ಕು.ಸ. ಮಧುಸೂದನ್ಡಾ.ಎಂ.ಈ.ಶಿವಕುಮಾರ್ ಹೊನ್ನಾಳಿ.ನಾಗರಾಜ ಹರಪನಹಳ್ಳಿ

ರಾಜ್ಯೋತ್ಸವದ ಶುಭಾಶಯಗಳು Read Post »

You cannot copy content of this page

Scroll to Top