ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅನುವಾದ

ಜಾನ್ ಮಿಲ್ಟನ್ ಕವಿತೆಯ ಅನುವಾದ

ಅಂಧಕಾರದೊಳಗಿಂದ ಇಂಗ್ಲೀಷ್ ಮೂಲ: ಜಾನ್ ಮಿಲ್ಟನ್ ಕನ್ನಡಕ್ಕೆ ವಿ.ಗಣೇಶ್ ನನ್ನ ಬದುಕಿನ ಬೆಳಕ ಹೇಗೆ ಸವಿದಿಹೆನೆಂದುಬಾಳ ಪುಟಗಳ ತಿರುವಿದರೆ ಬರಿ ಕತ್ತಲುಬೆಳಕು ಕತ್ತಲೆ ಮಧ್ಯೆ ಕಳೆದ ಬಾಳನು ಈಗಬೆಳಗಿಸಲು ಛಲ ಹೊತ್ತು ನಿಂತೆ ನಾನು ನನ್ನ ಭಕ್ತಿಗೆ ಮೆಚ್ಚಿ ನೀನಿತ್ತ ವರವೆನಗೆಕಾಣಿಕೆಯ ರೂಪದಲಿ ನಾನು ಪಡೆದಿರುವೆಅದನು ಬಳಸುವ ರೀತಿ ನನಗೆ ತಿಳಿದಿದೆ ಗುರುವೆಬೇರೆ ರೂಪದಿ ಕೊಡಲು ಮುಡುಪನಿಡುವೆ. `ಕಷ್ಟವೇನೇ ಇರಲಿ ಕಾಯಕವ ನೀ ಮಾಡುಅದಕೆ ಫಲ ನೀಡುವುದು ನನ್ನ ಇಚ್ಛೆ’ ಎಂದರಿತೂಅದನು ಮರೆತಿಹ ನಾನು ಬರಿದೆ ಕಾಲವ ಕಳೆದೆವ್ಯರ್ಥವಾಯಿತು ನನ್ನ ಬದುಕು ಹೀಗೆ ನೀನು ಪ್ರೀತಿಯಲಿತ್ತ ಆ ನಿನ್ನ ನೇಗಿಲನುಉಳುವ ಕಾರ್ಯಕೆ ಈಗ ಬಳಸುತಿರುವೆಇದಕಿಂತ ಮಿಗಿಲಾದ ನಿನ್ನ ಸೇರುವ ಮಾರ್ಗನನ್ನ ಮತಿಗೆಟುಕದದು ಕೇಳು ಪ್ರಭುವೆ ಕಾಯಕವೆ ಕೈಲಾಸ ಎಂಬ ಮಂತ್ರವನರಿತುನಿನ್ನ ಸೇವೆಯ ಮಾಡಲೆನ್ನನನುಗೊಳಿಸು ದೇವನಿನ್ನೊಲವಿನಾ ತೊರೆಯು ಶರಧಿಯೋಪಾದಿಯಲಿಹರಿವುದು ಎಲ್ಲೆಡೆಯಿಂದ ನನ್ನ ಕಡೆಗೆ. ********************************* On His Blindness: John Milton

ಜಾನ್ ಮಿಲ್ಟನ್ ಕವಿತೆಯ ಅನುವಾದ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ವಿ.ಹುಸೇನಿ ವಲ್ಲೂರು ಜಿಂದಗಿ ತುಂಬಾ ಬರಿ ಇರುಳ ತುಂಬಿದೆ ನಿನ್ನ ಬಿಟ್ಟು ಹೇಗೆ ಇರಲಿ ಸಖಿ!ಮೊಹಬತ್ತಿನ ತುಂಬಾ ಅರಳಿದ ಇರಳು ಓಡಿಸಬೇಕು ಇಲಾಲು ಹಿಡಿದು ಬಾ ಸಖಿ!! ಹಗಲು ನಾಚಿತು ಮೈ ಬಾಚಿತು ಸೆರಗ ತುಂಬ ಗಂಟು ಕಟ್ಟಿಕೊಂಡು!ಜೀವದೊಳಗ ಜೀವ ನೀನು ಹುಡುಕುತ್ತಿದೆ ಮನಸು ಸನಿಹಕ್ಕೆ ಬಾ ಸಖಿ!! ತುಟಿ ಕಚ್ಚಿ ಹೇಳಬೇಕೆಂದ ಒಂದು ಮಾತು ನನ್ನ ಮನಸಲ್ಲೇ ಉಳಿಯಿತು!ನಾ ಹೋದರು ಮಸಣದ ಗೋರಿ ಮೇಲಿನ ಮರಕ್ಕೊಂದು ಹಾಡು ಕಲಿಸು ಬಾ ಸಖಿ!! ಎಷ್ಟೊಂದು ಆಶೆಗಳು ಹೆಪ್ಪುಗಟ್ಟಿವೆ ನಿನ್ನ ನೋಡದೆ ತಲಬಾಗಿಲ ಮುಂದೆ!ಊರ ಅಂಗಳ ತುಂಬಾ ನಿನಗಾಗಿ ರಂಗೋಲಿ ಕಾಯುತ್ತಿದೆ ಬಾ ಸಖಿ!! “ವೀರ” ಪ್ರೇಮಿಯ ಮುಂದೆ ಬತ್ತಿದ ಕೆರೆಯಂಗಳ ಆಗಬೇಡ ಸಖಿ!ಎಷ್ಟು ಸಲ ಸೋತು ಸೋತು ಮಂಡಿ ಊರಿದ್ದೇನೆ ನಿನಗಾಗಿ ಬಾ ಸಖಿ!! *************************************

ಗಜಲ್ Read Post »

ಕಾವ್ಯಯಾನ

ಬಿಕ್ಕಳಿಸಿದ ಅವ್ವ

ಕವಿತೆ ಬಿಕ್ಕಳಿಸಿದ ಅವ್ವ ಡಾ.ಸುಜಾತಾ.ಸಿ ನವ ಮಾಸ ಹೊತ್ತುರಕ್ತ ಮಾಂಸ ತುಂಬಿಆಕಾರ ಕೊಟ್ಟಗರ್ಭಕ್ಕೆ ಕಪ್ಪನೆಕಾರ್ಮೊಡ ಕವಿದುಬದುಕಿನ ಕ್ಷಣ ಕ್ಷಣವುದುರ್ರಗಮನವಾಗಿಸಂಚಾರಿಸುತ್ತಿರಲುಬೇಡಾ ತಾಯಿಸಾಕು ಮಾಡುಗರ್ಭಧರಿಸಿಧರೆಯನ್ನು ಕಾಣಿಸುವುದು ಹಾಲುಣಿಸುವಾಗಕಚ್ಚಿ ಕಚ್ಚಿ ಹೀರಿದ ಮೊಲೆ ತೊಟ್ಟುಆಕಾಶಕ್ಕೆ ಬಾಯ್‌ತೆರೆದುನಿಂತರು ಹಸಿದ ಹೊಟ್ಟೆಗೆಮಾಂಸದ ಹಾಲುಣಿಸಿನಗುವ ಹಾಗೆ ಮಾಡಿದನಿನಗೆ ಇವತ್ತು ಬೀದಿಗೆತಂದಿಕ್ಕಿದ್ದಾರೆ ಮರುಳರು ನೆತ್ತಿಯ ಬಡಿತ ಹೆಚ್ಚಸಬಾರದೆಂದುಗAಧ ಮಿಶ್ರಿತ ದ್ರವ್ಯವನ್ನುಸವರಿ ಮುದ್ದಗಿ ತಿಡಿದನಿನ್ನ ಕೊಮಲ ಬೆರಳಿಗೆಹಾದಿ ಬೀದಿ ಕಸಗುಡಿಸಲುಹಚ್ಚಿ ಮೆರೆಯುತ್ತಿದ್ದಾರೆಸಾಕು ತಾಯಿ ಧರೆಗೆಎಂದು ಕರೆಯಬೇಡ ಮೆತ್ತನೆಯ ಹಾಸಿಗೆ ಹೊದಿಕೆ ಮಾಡಿಮಲಗಲೆಂದು ಕೈಯನ್ನೆ ದಿಂಬವಾಗಿಸಿಪಕ್ಕಕ್ಕೆ ಜಾರಿ ನಿದ್ರೆ ಮಾಡಿದ ನಿನಗೆಸ್ವಾರ್ಥ ತುಂಬಿದ ಮನುಜಹುಚ್ಚಿ ಪಟ್ಟ ಕಟ್ಟಿರೈಲ್ವೆ ಬಸ್ಸಸ್ಟಾಂಡಗಳಲ್ಲಿದಿನ ನಿತ್ಯ ಮಲಗುವಂತೆಮಾಡಿ ಹೆಂಡರ ಮಕ್ಕಳ ಜೊತೆಕುರ್ಲಾನ ಹಾಸಿಗೆಯಲ್ಲಿಮೂಢತ್ವದಿಂದ ಕಾಲು ಚಾಚಿಮಲಗಿದ್ದಾನೆ ತಾಯೇ *********************************** ಹಾಲುಂಡ ಎದೆಗೆಚೂರಿ ಇರಿಸಿದ ಮನುಷ್ಯಇನ್ನೆಂದು ಬದಲಾದಾನುದಯವಿಟ್ಟು ಬಿಕ್ಕಳಿಸಬೇಡಮತ್ತೆ ಮರುಕಳಿಸುತ್ತೆಬಿಕ್ಕಳಿಕೆಯ ನಾದಹೊರ ಬರುವ ಕಾಲ ************************************

ಬಿಕ್ಕಳಿಸಿದ ಅವ್ವ Read Post »

ಇತರೆ, ಜೀವನ

ಯೋಗ್ಯತೆಯಲ್ಲ ಯೋಗ ಬೇಕು

ಲೇಖನ ಯೋಗ್ಯತೆಯಲ್ಲ ಯೋಗ ಬೇಕು ಜ್ಯೋತಿ ಬಾಳಿಗಾ “ಯಾಕೆ ಒಳ್ಳೆ ಇಡ್ಲಿ ಹಿಟ್ಟು ಊದಿಕೊಂಡಹಾಗೆ ಮುಖ ಮಾಡಿ ಕೂತಿದ್ದೀಯಾ… ಏನಾಯಿತು ?” ಎಂದು ನನ್ನವರು ಕೇಳಿದಾಗ “ಯಾಕೋ ಮನಸ್ಸು ಸರಿಯಿಲ್ಲ ಕಣ್ರಿ.. ಅಳು ಬರುವ ಹಾಗಿದೆ…” ಎಂದು ನನ್ನ ಮನದ ಬೇಗುದಿಯನ್ನು ತಿಳಿಸದೇ ಮಾತನ್ನು ತಳ್ಳಿ ಹಾಕಿದೆ. “ವಿಷಯ ಏನೂಂತ ಹೇಳಿದ್ರೆ ನನಗೂ ಗೊತ್ತಾಗುತ್ತದೆ, ಅದು ಬಿಟ್ಟು ಮನಸ್ಸು ಸರಿಯಿಲ್ಲಾಂತ ಹೇಳಿದ್ರೆ ಹೇಗೆ …? ಇಡೀ ದಿನ ಓದುವುದು, ಬರೆಯೋದೆ ಆಯಿತು. ಯೋಚನೆ ಮಾಡಿ ಮಾಡಿ ತಲೆ ಹಾಳು ಮಾಡಿಕೊಳ್ಳೋದು ಅಲ್ಲದೇ ನಮ್ಮ ತಲೆನೂ ಕೆಡಿಸ್ತಾ ಇದ್ದೀಯಾ…” ಎಂದು ಹರಿಹಾಯ್ದರು. ಯಾವಾಗ ನಾನು ಸಪ್ಪಗಾದರೂ, ಅದರ‌ ನೇರ ಹೊಣೆ ನನ್ನ ಬರವಣಿಗೆಯ ಮೇಲೆ ಹಾಕುತ್ತಾರೆ. ಕೊನೆಗೆ ಬರೆಯೋದು ನಿಲ್ಲಿಸು ಎಂದು ನನ್ನ ಬುಡಕ್ಕೆ ಬರುತ್ತೆ ಮಾತು. ಅದಕ್ಕೆ ನನ್ನವರಿಗೆ ವಿಷಯ ಏನೂಂತ ಹೇಳುವ ಮನಸ್ಸು ಮಾಡಿದೆ. “ಅಲ್ಲಾರೀ‌… ಹೆಣ್ಣು ಮಕ್ಕಳು ಆಗದೇ ಇರೋದು ನಮ್ಮ ತಪ್ಪಾ ? ಹೆಣ್ಣು ಮಕ್ಕಳು ಮನೆಯ ನಂದಾದೀಪ. ಮನೆಗೊಂದು ಕಳೆ ಹೀಗೆ ಏನಾದರೂ ಪೋಸ್ಟ್ ಹಾಕಲಿ ಬೇಡ ಅನ್ನಲ್ಲ ನಾನು. ಆದರೆ ಹೆಣ್ಣುಮಕ್ಕಳು ಹುಟ್ಟಬೇಕು ಅಂದ್ರೆ ಪುಣ್ಯ ಮಾಡಿರಬೇಕಂತೆ, ಯೋಗ್ಯತೆ ಇದ್ದವರಿಗೆ ಮಾತ್ರ ಹೆಣ್ಣುಮಕ್ಕಳು ಹುಟ್ಟುತ್ತವೆಯಂತೆ … ಹೀಗೆ ಪೋಸ್ಟ್ ಹಾಕಿ ಹೊಟ್ಟೆ ಉರಿಸುತ್ತಾ ಇದ್ದಾರೆ‌ ಕಣ್ರಿ…” ಎಂದು ಗೋಳಿಟ್ಟೆ. “ಮಕ್ಕಳು ಹುಟ್ಟುವುದೇ ಒಂದು ಅದೃಷ್ಟ ಕಣೆ. ಹೆಣ್ಣಾಗಲಿ, ಗಂಡಾಗಲಿ ದೇವರು ಕೊಟ್ಟ ವರದಂತೆ ಸ್ವೀಕರಿಸಿ ಯೋಗ್ಯ ರೀತಿಯಲ್ಲಿ ಬೆಳಸಬೇಕೆ ಹೊರತು ಪಾಪ, ಪುಣ್ಯ ಎಂದು ಜಿದ್ದಿಗೆ ಬಿದ್ದವರ ಹಾಗೆ ಪೋಸ್ಟ್ ಹಾಕುವುದಲ್ಲ. ಒಮ್ಮೆ ಸುತ್ತಮುತ್ತಲಿನ ಜನರನ್ನು ನೋಡು, ಹೆಣ್ಣೋ, ಗಂಡೋ ಒಂದು ಮಗು ಹುಟ್ಟಿದರೆ ಸಾಕೂಂತ ಕಾಯುವ ಜೀವಗಳು ಎಷ್ಟಿವೆ ಗೊತ್ತಿಲ್ವಾ ? ಗಂಡು ಮಕ್ಕಳು ಹುಟ್ಟಿ ಏನು ತೊಂದರೆಯಾಗಿದೆ ನಿನಗೆ ? ಒಂದು ವೇಳೆ ಹೆಣ್ಣು ಮಕ್ಕಳೇ ಹುಟ್ಟಿದ್ರೆ ಏನ್ ಸಾಧನೆ ಮಾಡಿಸುತ್ತಿದ್ದೆ ನೀನು..? ನಿನ್ನ ಗಂಡು ಮಕ್ಕಳು ಯಾರಿಗೆ ಯಾವುದಕ್ಕೆ ಕಡಿಮೆ ಇದ್ದಾರೆ ಹೇಳು..? ” ಎಂದು  ಪ್ರಶ್ನೆಗಳ ಸುರಿಮಳೆ ಸುರಿಸಿದರು. ನಾನು ಮೌನವಾಗಿ ಅವರ ಮಾತುಗಳನ್ನು ಕೇಳಿಸಿಕೊಳ್ಳುತ್ತಿದ್ದೆ. “ಮಕ್ಕಳು ತಂದೆ ತಾಯಿಯ ಕಷ್ಟ ಅರಿತುಕೊಂಡು ಅವರಿಗೆ ವಿಧೇಯರಾಗಿರಬೇಕೆ ಹೊರತು ಹೇಳಿದ ಮಾತು ಕೇಳದೆ, ಅಷ್ಟೇನೂ ಚೆನ್ನಾಗಿಲ್ಲದ ತಂದೆಯ ಆರ್ಥಿಕ ಸ್ಥಿತಿಯನ್ನು ನೋಡಿದರೂ ಕೂಡ ಹಠಮಾಡಿ ತಮಗೆ ಬೇಕಾದದ್ದನ್ನು ತರಿಸಿಕೊಳ್ಳುವವರು, ಅಮ್ಮನಿಗೆ ಆರೋಗ್ಯ ಸರಿಯಿಲ್ಲದಿದ್ದರೂ ಕಿಂಚಿತ್ತೂ ಸಹಾಯ ಮಾಡದೇ ಬರೀ ಅಲಂಕಾರ ಮಾಡಿಕೊಂಡು ಷೋಕೇಷಿನಲ್ಲಿ ಇಡುವ ಬೊಂಬೆ ತರಹ ಇದ್ದರೆ ಏನು ಪ್ರಯೋಜನ ಹೇಳು…? ಅವತ್ತು ಪರಿಚಯದವರ ಮನೆಗೆ ಹೋದಾಗ ನೀನೆ ನೋಡಲಿಲ್ವಾ? ಅವರ ಮನೆಯ ಪರಿಸ್ಥಿತಿ ನೋಡಿ ಅರ್ಥಮಾಡಿಕೊಳ್ಳದೆ ಹೊಸ ಮೊಬೈಲ್ ಬೇಕೂಂತ ಅಷ್ಟು ದೊಡ್ಡ ಹುಡುಗಿ ಹೇಗೆ ಹಠ ಮಾಡ್ತಿದ್ದಳು….”ಎಂದು ವಾಸ್ತವದ ಅರಿವು ಮಾಡಿಸಿ ಸಮಾಧಾನ ಮಾಡಿದರು. “ಹೌದು ರೀ… ನಾನು ಇಷ್ಟು ದಿನದಿಂದಸುಮ್ಮನೆ ತಲೆಕೆಡಿಸಿಕೊಂಡಿದ್ದೆ..” ಎಂದು ಹೇಳಿದೆ. “ಹೆಣ್ಣೋ, ಗಂಡೋ ಆರೋಗ್ಯವಂತ , ಹಿರಿಯರಿಗೆ ಗೌರವ ಕೊಡುವ ಸಂಸ್ಕಾರವಂತ ಮಕ್ಕಳು ಮುಖ್ಯ ಕಣೆ..”  ಎಂದು ಬೆನ್ನು ತಟ್ಟಿ ಹೋದರು. ನನಗೆ ನನ್ನ ಮಕ್ಕಳ ಬಾಲ್ಯದ ನೆನಪುಗಳು ಕಾಡಲು ಶುರುವಾದವು. ಮೊದಲನೆಯ ಮಗು ಹೆಣ್ಣಾಗಬೇಕೂಂತ ತುಂಬಾ ಆಸೆಯಿಂದ ಇದ್ದೆ. ಗಂಡು ಮಗು ಆದಾಗ ಆಸೆ ನಿರಾಸೆಯಾಗಿತ್ತು. ಗಂಡೋ ಹೆಣ್ಣೋ ಮಗು ಹುಟ್ಟಿತಲ್ವಾ ? ಸಂತೋಷ ಪಡು ಎಂದು ಮನೆಯವರೆಲ್ಲಾ ಹೇಳಿದರೂ ಮನಸ್ಸಿನಲ್ಲಿ ಹೆಣ್ಣಾಗಲಿಲ್ಲ ಎಂಬ ಕೊರಗು ಇದ್ದೆ ಇತ್ತು. ಅವನ ಹುಡುಗಾಟಿಕೆಯ ಬುದ್ಧಿಗೋ, ನನಗೆ ಮಗುವನ್ನು ನೋಡಿಕೊಳ್ಳಲು ತಿಳಿಯದೆಯೋ ದೊಡ್ಡ ಮಗ ನನ್ನಿಂದ ಏಟು, ಬೈಗುಳ ಸರಿಯಾಗಿ ತಿನ್ನುತ್ತಿದ್ದ. ನನಗೆ ಅವನಿಗೆ ತರಕಾರಿ ತಿನ್ನಿಸುವ ಹುಚ್ಚು. ಅವನಿಗೆ ತರಕಾರಿ ಅಂದರೆ ಗಂಟಲಿನಲ್ಲಿ ಇಳಿಯುತಿರಲಿಲ್ಲ. ಹೇಗಾದರೂ ಮಾಡಿ ತಿನ್ನಿಸಬೇಕೆಂದು ಬೇಯಿಸಿ ಮಿಕ್ಸಿಯಲ್ಲಿ ಹಾಕಿಯೋ ಹೊಸ ಹೊಸ ಸಂಶೋಧನೆ ಮಾಡಿಯೋ ಅವನಿಗೆ ತರಕಾರಿಯನ್ನು ತಿನ್ನಿಸುತ್ತಿದ್ದೆ. ನನ್ನ ಒತ್ತಾಯಕ್ಕೋ, ಹೆದರಿಕೆಗೋ ಆ ಕ್ಷಣ ತಿಂದರೂ ಸ್ವಲ್ಪ ಹೊತ್ತಿನಲ್ಲಿ ಎಲ್ಲಾ ವಾಂತಿ ಮಾಡುತ್ತಿದ್ದ. ಹೀಗೆ ವಾಂತಿ ಬಳಿದು ಬಳಿದು ಸಾಕಾಗಿ ಕೊನೆಗೆ ನಾನು ಅಲ್ಲಲ್ಲಿ ಬಕೆಟ್ ಇಡೋಕೆ ಶುರು ಮಾಡಿದೆ. ವಾಂತಿ ಬಂದ ಕೂಡಲೇ ಬಕೆಟ್ನಲ್ಲೇ ವಾಂತಿ ಮಾಡಬೇಕೂಂತ ಕಲಿಸಿದ್ದೆ. ತರಕಾರಿ ತಿಂದ ಕೂಡಲೇ ಬಕೇಟ್ ನಲ್ಲಿ ವಾಂತಿ ಮಾಡೋದು ಮಾಡ್ತಿದ್ದ. ಆಮೇಲೆ ನಾನು ತೊಳೆದಿಡುವುದು ಹೀಗೆ ದಿನಾ ಹೋಗ್ತಾ ಇತ್ತು. ಯಾವಾಗ ನಾನು ಮತ್ತೊಮ್ಮೆ ತಾಯಿಯಾಗುವೆನೆಂದು ತಿಳಿಯಿತೋ ಎರಡನೆಯ ಮಗು ಹೆಣ್ಣಾಗಲಿ ಎಂದು ಆಶಿಸಿದ್ದೆ. ಮೊದಲನೆಯ ಸಲ ಇರುವಾಗ ಇದ್ದ ಗರ್ಭಿಣಿಯ ಲಕ್ಷಣ ಕಾಣಿಸದೇ ಇದ್ದಾಗ ನನ್ನ ಆಸೆ ಹೆಚ್ಚಾಯಿತು. ಮೊದಲನೆ ಗರ್ಭಾವಸ್ಥೆಯಲ್ಲಿ ನನಗೆ ಅಷ್ಟೊಂದು ವಾಂತಿ ಇರಲಿಲ್ಲ. ಎರಡನೆಯ ಗರ್ಭಾವಸ್ಥೆಯಲ್ಲಿ ನನಗೆ ವಾಂತಿ ಶುರುವಾಯಿತು. ಅನ್ನ ಬಿಡಿ, ನೀರು ಕುಡಿದರೂ ವಾಂತಿ ಬರುತಿತ್ತು. ನಾನು ಓಡಿ ಹೋಗಿ ಬಾತ್ ರೂಮಿನಲ್ಲಿ ವಾಂತಿ ಮಾಡಿ ಬರುತ್ತಿದ್ದೆ. ನನ್ನ ವಾಂತಿ ನೋಡಿ ನೋಡಿ ನನ್ನ ಮಗ ಒಂದು ದಿನ ಬಕೆಟ್ ಹಿಡಿದು ನಿಂತಿದ್ದಾನೆ. ಅಮ್ಮಾ… ಇದರಲ್ಲಿ ವಾಂತಿ ಮಾಡು ಎಂದು ಬಕೆಟ್ ಕೈಯಲ್ಲಿ ಕೊಟ್ಟ. ನನಗೂ ಓಡಿ ಓಡಿ ಸುಸ್ತಾಗಿದ್ದ ಕಾರಣ ಬಕೆಟ್ ನಲ್ಲಿ ವಾಂತಿ ಮಾಡಿ ಮಲಗಿದೆ. ಸ್ವಲ್ಪ ಹೊತ್ತಿನಲ್ಲಿ ಸದ್ದು ಕೇಳಿ ಎಚ್ಚೆತ್ತಾಗ ಮಗನ ಕೈಯಲ್ಲಿ ಕ್ಲೀನ್ ಮಾಡಿದ ಬಕೆಟ್ ಇದೆ. ಇವರು ಬಂದಿದ್ರಾ ಎಂದು ನೋಡಿದರೆ ಹಾಕಿದ ಲಾಕ್ ಹಾಗೇ ಇದೆ. ಆರೋಗ್ಯ ಸರಿಯಿಲ್ಲಾಂದ್ರೆ ಒಂದು ತೊಟ್ಟು ನೀರು ಕೊಡೋದಕ್ಕೂ‌ ಹೆಣ್ಣಿನ ಗತಿಯಿಲ್ಲ ಎಂದು ಎಷ್ಟೋ ಸಲ ಗಂಡು ಮಗು ಹುಟ್ಟಿದಾಗ ಬೇಸರ ಮಾಡಿಕೊಂಡಿದ್ದೆ. ಆದರೆ ನನ್ನೆಲ್ಲಾ ಮಾತುಗಳನ್ನು ಹಿಂಪಡೆಯುವಂತೆ ಮಾಡಿದ್ದ ನನ್ನ ಮಗ. ಕ್ಲೀನ್ ಆದ ಬಕೇಟ್ ನೋಡಿದಾಗನನಗಂತೂ ನಿಜವಾಗಿ ಅಳುನೇ ಬಂದು ಬಿಡ್ತು. ನನ್ನ ಕಂದನಿಗೆ ಅವಾಗ ಬರಿ ಎರಡುವರೆ ವರ್ಷ…!! ಅವನ ಗುಣವನ್ನು ‌ನೋಡಿದ ಮೇಲೆ ಮತ್ತೆಂದೂ ಹೆಣ್ಣು ಹುಟ್ಟಲಿಲ್ಲ ಎಂದು ದುಃಖವನ್ನು ಪಡಲಿಲ್ಲ ನಾನು. ಎರಡನೆಯ ಮಗುವೂ ಗಂಡು ಮಗುವಾದಾಗ ಸಂಭ್ರಮದಿಂದ ಸ್ವಾಗತಿಸಿದೆ. ನನಗಿನ್ನೂ ನೆನಪಿದೆ. ಎಂಟು ವರ್ಷದ ಹಿಂದೆ ನನಗೆ ಆರೋಗ್ಯ ಸಮಸ್ಯೆಯಿಂದವೈದ್ಯರು ಬೆಡ್ ರೆಸ್ಟ್ ಹೇಳಿದ್ದರು. ಇವರು ಅಡುಗೆಯನ್ನು ಮಾಡಿಕೊಟ್ಟು ತೋಟದ ಉಸ್ತುವಾರಿ‌ ನೋಡಿಕೊಳ್ಳಲು ಹೋದಾಗ ಇಬ್ಬರೂ ಗಂಡು ಮಕ್ಕಳೇ ನನ್ನ ಅಪ್ಪ ಅಮ್ಮನಂತೆ ನೋಡಿಕೊಂಡಿದ್ದಾರೆ. ಅಂದಿನಿಂದ ಇಂದಿನವರೆಗೂ ಅಡುಗೆಯಿಂದ ಹಿಡಿದು ಮನೆಯ ಸ್ವಚ್ಚತೆಯ ಕೆಲಸದಲ್ಲೂ ಜೊತೆಗೂಡುತ್ತಾರೆ. ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ ಗಂಡು ಮಕ್ಕಳನ್ನು ಹೆಡೆದವರಿಗೆ ನೋವು ಕೊಡುವ ಪೋಷಕರೇ ಈಗ ಹೇಳಿ ಹೆಣ್ಣು ಮಕ್ಕಳು ಹುಟ್ಟಿದರೆ ಭಾಗ್ಯವೋ..? ಗಂಡೋ, ಹೆಣ್ಣೋ ನಮ್ಮ ಪಾಲಿಗೆ ಬಂದದ್ದು ಪಂಚಾಮೃತವೆಂದು ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಟ್ಟು ಯೋಗ್ಯ ರೀತಿಯಲ್ಲಿ ಬೆಳಸುವುದು ಉತ್ತಮವೋ…?! *************************************************

ಯೋಗ್ಯತೆಯಲ್ಲ ಯೋಗ ಬೇಕು Read Post »

ಕಾವ್ಯಯಾನ

ನೀನೊಂದು ಕಾವ್ಯ

ಕವಿತೆ ನೀನೊಂದು ಕಾವ್ಯ ಆನಂದ ಆರ್.ಗೌಡ ತಾಳೇಬೈಲ್ ನೀನೊಂದು ಕಾವ್ಯಭಾವ ಮನದ ಧರೆಯಲಿನಿನ್ನ ನಡಿಗೆಯೊಳಗಿನ ಮಿಲನತೆನಿಗೂಢ ಬೆಳಕು ಬೀರಿದೆ ನಗುವಿನ ಕೆನ್ನೆ ಗುಳಿ ನಕ್ಷತ್ರ ಕಡ್ಡಿಯಹೊಳಪಿನ ವದನ ಆಗಾಗ ಸಹನೆಯಿಂದಜಾರುವ ಕಣ್ಣಹನಿ ಆರಾಧನೆಯ ಹೃನ್ಮನತಬ್ಬಿಕೊಂಡಾಗಿನ ಧನ್ಯತೆನನ್ನ ತೆಕ್ಕೆಯಲ್ಲಿ ಹಾಗೇಹುದುಗುವ ಪರಿ ಎಲ್ಲವೂ ಮೊದಲಿನಂತೆ ಮಧ್ಯಾಹ್ನದ ನೆರಳಿನಂತೆನನ್ನೊಳಗೆ ನೀನಿದ್ದೆಬೆವೆತ ಎದೆ ಮೇಲಿನ ನಿನ್ನ ಮೊಗನನ್ನ ನಿದಿರೆ ಕದ್ದು ಮೆರೆಯುತ್ತಿದ್ದುಮೊದಲ ಸಲುಗೆ ಅಪ್ಪುಗೆಯ ದಾಹಎಲ್ಲವನ್ನೂ ತಣಿಸಿದ ಪರಿಒಲುಮೆಯ ಕಾವ್ಯದಂತೆ ನಿನ್ನ ಮುನಿಸಿನ ಸನಿಹದಸ್ಪರ್ಶದಲಿ ಯಾವುದೇ ಗಾಯವಿಲ್ಲಮಡಿಕೆಯಲಿ ತುಂಬಾನೇಬೇಸಿ ಉಂಡ ನೆನಪು ಎಂದಿಗೂ ಮಾಸದಿರಲಿಹಾಗೇ ಸುಮ್ಮನೆ ಒಡೆಯದಿರಲಿನನ್ನದೊಂದು ಕನಸಿನಂತೆನಿನ್ನ ಮಡಿಲು ನನ್ನ ಚಿರನಿದ್ರೆಯನೆಲೆಯಾಗಿರಲಿ ! *********************************************

ನೀನೊಂದು ಕಾವ್ಯ Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಅಂಕಣ ಬರಹ ಸೋತು ಗೆದ್ದ ಮನುಷ್ಯ ಸೋತು ಗೆದ್ದ ಮನುಷ್ಯತೆಲುಗು ಮೂಲ : ಮಲ್ಲಾರೆಡ್ಡಿಅನುವಾದ : ಕಸ್ತೂರಿಪ್ರ : ನವಕರ್ನಾಟಕ ಪಬ್ಲಿಕೇಷನ್ಸ್ಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೧೦೪ ¥ಪುಟಗಳು :೧೫೨ ಇದು ತೆಲುಗು ಮೂಲದ ಮಲ್ಲಾರೆಡ್ಡಿಯವರ ಆತ್ಮಕಥೆ. ವಿಷಮ ಪರಿಸ್ಥಿತಿಗಳು ತಂದ ನೋವು-ಸಂಕಷ್ಟಗಳಿಂದಾಗಿ ಮಾನಸಿಕವಾಗಿ ನೊಂದು ಬದುಕಿನಲ್ಲಿ ಭರವಸೆಯನ್ನೇ ಕಳೆದುಕೊಂಡು ಮಾನಸಿಕವಾಗಿ ಅಸ್ವಸ್ಥನಾದ ವ್ಯಕ್ತಿಯೊಬ್ಬ ತನ್ನ ಎಲ್ಲಾ ಅನುಭವಗಳನ್ನು ಇಲ್ಲಿ ವಿವರವಾಗಿ ಮನಮುಟ್ಟುವಂತೆ ಹೇಳುತ್ತಾನೆ. ತೀರಾ ಎಳೆಯ ಹುಡುಗನಾಗಿದ್ದಾಗಲೇ ಸೂಕ್ಷ್ಮ ಸಂವೇದನೆಯುಳ್ಳವನಾಗಿದ್ದರಿಂದ ತನ್ನ ಸುತ್ತ ಮುತ್ತ ನಡೆಯುವ ಎಲ್ಲಾ ವಿದ್ಯಮಾನಗಳನ್ನು ಆತ ತಣ್ಣಗೆ ಗಮನಿಸುತ್ತಾನೆ. ಅವನದ್ದು ಅವಿಭಕ್ತ ಕುಟುಂಬ. ಅವನು ತಂದೆಗೆ ಎರಡನೆಯ ಹೆಂಡತಿಯ ಮಗ. ತನ್ನ ತಂದೆ ತನ್ನ ತಾಯಿಗೆ ಹೆಚ್ಚು ಪ್ರೀತಿಯನ್ನು ಕೊಟ್ಟು ಮೊದಲ ಹೆಂಡತಿಯನ್ನು ಕಡೆಗಣಿಸುವುದನ್ನು ಪುಟ್ಟ ಹುಡುಗ ನೋಡುತ್ತಾನೆ. ಮುಂದೆ ಮೊದಲ ಹೆಂಡತಿ ತನ್ನ ಪಾಲಿನ ಆಸ್ತಿಯನ್ನು ಕೇಳಿ ಕುಟುಂಬವನ್ನು ಬಿಟ್ಟು ತನ್ನ ಮಕ್ಕಳೊಂದಿಗೆ ಬೇರೆಡೆಗೆ ಹೋಗಿದ್ದು ಅವನನ್ನು ಅಪಾರವಾಗಿ ನೋಯಿಸುತ್ತದೆ. ಅವನು ದೊಡ್ಡಮ್ಮನ ಮಗನನ್ನು ಅಪಾರವಾಗಿ ಪ್ರೀತಿಸಿದ್ದ . ಚಿಕ್ಕವನಾಗಿದ್ದಾಗ ನೆರೆಮನೆಯ ರಾಮು ಅವನ ಆತ್ಮೀಯ ಗೆಳೆಯನಾಗಿದ್ದ. ಆದರೂ ಅವನಿಗೆ ಗೊತ್ತಿಲ್ಲದೆಯೇ ಅವನು ಒಮ್ಮೆ ರಾಮುವಿನ ಪೆನ್ನನ್ನು ಕದ್ದಿದ್ದ. ಮುಂದೆ ಹೈಸ್ಕೂಲು ಮುಗಿಸಿ ಹೈದರಾಬಾದಿನಲ್ಲಿ ಕಾಲೇಜು ಶಿಕ್ಷಣಕ್ಕಾಗಿ ಅವನು ಹೋಗುತ್ತಾನೆ. ಅಲ್ಲಿ ಸೀಟು ಸಿಕ್ಕದೆ ಅವನು ತುಂಬಾ ಅಡೆತಡೆಗಳನ್ನು ಅನುಭವಿಸಬೇಕಾಗುತ್ತದೆ. ಅದರ ಪರಿಣಾಮವಾಗಿ ಅವನು ಮನೋರೋಗಕ್ಕೆ ತುತ್ತಾಗುತ್ತಾನೆ. ಆರಂಭದಲ್ಲಿ ವೈದ್ಯರ ಬಳಿಗೆ ಹೋಗಲು ಯಾವುದೋ ಕೀಳರಿಮೆಯಿಂದಾಗಿ ಅವನು ಹಿಂದೇಟು ಹಾಕುತ್ತಾನೆ. ಆದರೆ ಸರಿಯಾದ ಸಮಯಕ್ಕೆ ಯಾರದ್ದೋ ಉಪದೇಶದಿಂದ ಸೂಕ್ತ ಚಿಕಿತ್ಸೆ ಪಡೆದು ಗುಣಮುಖನಾಗುತ್ತಾನೆ . ದೈಹಿಕವಾಗಿ ಗಟ್ಟಿಮುಟ್ಟಾಗಿದ್ದ ಅವನು ಮುಂದೆ ತನ್ನ ಶಿಕ್ಷಣವನ್ನು ಮುಂದುವರೆಸಿ ಭಾರತದ ವಿವಿಧ ರಾಜ್ಯಗಳಲ್ಲಿ ಮಾತ್ರವಲ್ಲದೆ ಅಲ್ಜೀರಿಯಾಗೂ ಹೋಗಿ ಅಲ್ಲಿ ಇಂಗ್ಲಿಷ್ ಅಧ್ಯಾಪಕನಾಗಿ ಉದ್ಯೋಗ ಗಳಿಸಿ ಜೀವನದಲ್ಲಿ ಯಶಸ್ವಿಯಾಗುತ್ತಾನೆ. ಅನೇಕರು ತಮಗೆ ರೋಗವಿದೆಯೆಂದು ಗೊತ್ತಿದ್ದೂ ಮಾನಸಿಕ ತಜ್ಞರನ್ನು ಭೇಟಿಯಾಗಲು ಹಿಂದೇಟು ಹಾಕಿ ತಮ್ಮ ರೋಗ ಉಲ್ಬಣಗೊಳ್ಳುವುದಕ್ಕೆ ತಾವೇ ಕಾರಣರಾಗುತ್ತಾರೆ, ಅಂಥವರಿಗೆ ಮಾರ್ಗದರ್ಶನ ನೀಡುವಂಥ ಒಂದು ಕೃತಿಯಿದು. ಕೃತಿಯ ವಸ್ತು ಪ್ರಸ್ತುತತೆಯುಳ್ಳದ್ದಾಗಿದೆ. ಭಾಷೆ, ನಿರೂಪಣಾ ಶೈಲಿಗಳು ಸರಳವೂ ಸುಲಲಿತವೂ ಆಗಿದ್ದು ಸರಾಗವಾಗಿ ಓದಿಸಿಕೊಂಡು ಹೋಗುತ್ತದೆ. ******************************** ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

You cannot copy content of this page

Scroll to Top