ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಥಾಗುಚ್ಛ

ಮರಳಿ ತವರಿಗೆ

ಸಣ್ಣ ಕಥೆ ಮರಳಿ ತವರಿಗೆ ನಾಗರಾಜ್ ಹರಪನಹಳ್ಳಿ ಕರೋನಾ ಕಾರಣವಾಗಿ ತವರು ಮನೆಗೆ ಕೊಲ್ಲಾಪುರ ದಿಂದ ಬಂದಿದ್ದ ರೋಶನಿ ತನ್ನೆರಡು‌ ಮಕ್ಕಳೊಂದಿಗೆ ಹೈಸ್ಕೂಲ್ ಗೆಳತಿ ಶರ್ಮಿತಾಳನ್ನು ಕಾಣಲು ಹೊರಟಳು.ಮಲೆ ‌ನಾಡಿನ ಒಂಟಿ ಮನೆಗಳು ಅಡಿಕೆ ತೆಂಗು ಹಾಗೂ ಕಾಡಿನ ಮರಗಳ ಮಧ್ಯೆ ಅಡಗಿರುವುದೇ ಹೆಚ್ಚು. ಶರ್ಮಿತಾಳ ತಾಯಿ ಮನೆ ಎದುರು ದನಗಳಿಗೆ ಕರಡ ಬೆಳೆಯಲು ಬಿಟ್ಟಿದ್ದ ಬಯಲು ಭೂಮಿ , ಜೂನ್  ತಿಂಗಳು ಎರಡು ವಾರ  ಸುರಿದ  ಮಳೆಯ ಕಾರಣ , ಅದಾಗಲೇ ಹಸಿರಾಗಿ ಇತ್ತು.‌‌  ಮೊದಲ ಮಹಡಿಯ ಮೇಲಿನ ಕಾರಿಡಾರ್ ನಿಂದ ತನ್ನ ಮನೆಯತ್ತ ಹೆಣ್ಮಗಳೊಬ್ಬಳು  ಮಕ್ಕಳೊಂದಿಗೆ ಬರುತ್ತಿರುವುದ ಗಮನಿಸಿ,  ‘ ಆಯಿ ,  ಯಾರೋ ನೆಂಟರು ಬಂದ್ರೆ’  ಅಂತ ಕೂಗಿ ಸೂಚನೆ ಕೊಟ್ಟಳು. ಮನೆಯಿಂದ ಹೊರ ಬಂದ ಆಯಿ , ದೂರದಿಂದಲೇ ಭಟ್ಟರ ಮನೆ ಮಗು ಅಂಬಂಗೆ ಕಾಣ್ತದೆ.  ಅವಳು ಈಚೆಗೆ ನಾಲ್ಕು ವರ್ಷ ಆಯಿತು ;  ಈಕಡೆ ಬಂದಿರಲಿಲ್ಲ.‌ ಈಗ ಬಂದಿರಬೇಕು ಎಂದ ಆಯಿ  ,ಬಳ್ಳಿಯಲ್ಲಿ ಅರಳಿದ ಮಲ್ಲಿಗೆ ಹೂ ಬಿಡಿಸಿತೊಡಗಿದಳು. ಪುಟಾಣಿ‌ ಮಕ್ಕಳೊಂದಿಗೆ ಮನೆ ಹತ್ತಿರ  ಬಂದಂತೆ ಆಕೆ ರೋಶನಿ ! ,  ತನ್ನ ಹೈಸ್ಕೂಲ್ ಗೆಳತಿ ಎಂದು ಶರ್ಮಿತಾಳಿಗೆ  ಮನದಟ್ಟಾಗುತ್ತಿದ್ದಂತೆ , ಕಣ್ಣುಗಳು ಅರಳಿದವು.  ಮನೆಯಂಗಳಕ್ಕೆ ಬಂದದ್ದೇ ನಗುವಿನ‌ ವಿನಿಮಯ, ಆತ್ಮೀಯ ‌ಅಪ್ಪುಗೆಯ ನಂತರ‌ ಇಬ್ಬರೂ  ಮಾತಿಗಿಳಿದರು .   ಗಂಟೆಗಟ್ಟಲೆ ಮಾತು.‌ ಅಪರೂಪಕ್ಕೆ ಹತ್ತು ವರ್ಷಗಳ ನಂತರದ ಭೇಟಿ.‌ ಕೇಳಬೇಕೆ? ಉತ್ಸಾಹ , ಕುತೂಹಲಗಳು ಮರದ ಕವಲುಗಳು  ಮುಗಿಲ ಕಡೆ ಮುಖ ಮಾಡಿದಂತೆ , ಮನಸು ದೂರ ಕಾಣುವ ದಿಗಂತ ನೋಡುತ್ತಲೇ ಗೆಳತಿರ ಕಣ್ಣೋಟಗಳು ಬೆರೆತಿದ್ದವು.  ಶರ್ಮಿತಾ ಈಗ ಕವಯಿತ್ರಿಯಾಗಿದ್ದಳು. ರೋಶನಿಯ ‘ಆಯಿ’  ಈ‌ ಸುದ್ದಿಯನ್ನು ‌ಕೊಲ್ಲಾಪುರದಿಂದ ಬಂದ ಮೊದಲ ದಿನವೇ  ಶರ್ಮಿತಾಳ ಸುದ್ದಿ ಮಾತಾಡಿ ಕುತೂಹಲ ನೂರ್ಮಡಿಸಿದ್ದಳು .  ಆ ಕುತೂಹಲ ತಣಿಸಿಕೊಳ್ಳಲು, ಅವಳ  ಕವನ ಸಂಕಲನ ಪಡೆಯಲು ಹಾಗೂ ಗೆಳತಿಯ ಪ್ರಸಿದ್ಧಿ ಅರಿತು ಖುಷಿಪಡಲು  ರೋಶನಿ ಬಂದದ್ದಾಗಿತ್ತು. ಅಂತೂ ಕವಯಿತ್ರಿಯ ಸುದ್ದಿ  ಕೇಳಿದ ಮೇಲೆ ; ತನ್ನ ಲಂಡನ್ ಪ್ರವಾಸ, ಅಲ್ಲಿನ ಜನ ,‌ಜೀವನ, ಯುವ ಜನರ ಬದುಕು, ಪ್ರೀತಿ, ಮುಕ್ತವಾದ ಜೀವನೋತ್ಸಾಹ , ಪ್ರಾಜೆಕ್ಟ್ ವರ್ಕ  ಬಗ್ಗೆ ಮಾತು ಹೊರಳಿ ಕೊಂಡವು ಹಾಗೂ ಕೊಲ್ಲಾಪುರದಿಂದ ಮರಳಿ ತವರಿಗೆ ಬಂದ ಕಾರಣದ  ವಿವರಗಳು  ಒಂದೊಂದೆ ಎಳೆ ಎಳೆಯಾಗಿ ಮಾತಲ್ಲಿ  ನಡೆಯುತ್ತಾ  ಹೋದವು.  ಸಮಾಜಶಾಸ್ತ್ರ ಅಧ್ಯಯನ, ಪಿಎಚ್ಡಿ  ಮಾಡಿದ್ದು …ಎಲ್ಲಾ ಹೇಳಿದ ನಂತರ ; ಗಂಡನ ಕಡೆ ಮಾತು‌ ಹೊರಳಿತು. ‘ ಹೇಗೆ ನಿಮ್ಮ ಮನೆಯವರು ಅಂತ ‘  ಪ್ರಶ್ನೆ ಎಸೆದಳು ಶರ್ಮಿತಾ . ‌ ಹಾಗೆ ನೋಡಿದರೆ ಶರ್ಮಿತಾಳ‌ ಊರಿನವನೇ ಆಗಿದ್ದ ವಿನಾಯಕ ಎಂಜಿನಿಯರಿಂಗ್ ಮಾಡಿ, ದೇಶ ಅಲೆದು,  ಮುಂಬಯಿ, ಪುಣೆ ಸುತ್ತಿ ಕೊಲ್ಲಾಪುರದಲ್ಲಿ ‌ನೆಲೆ ನಿಂತಿದ್ದ.‌   ಕರೋನಾ ಕಾರಣವಾಗಿ‌ ಅವನು ತನ್ನ ಮೂಲ ಮನೆಗೆ ಮರಳಿದ್ದ.‌ ಪಕ್ಕದ ವಾಟಗಾರ ಗ್ರಾಮದ ಹೈಸ್ಕೂಲ್ ಸಹಪಾಠಿ ರೋಶನಿಯನ್ನೇ ಮದುವೆಯಾಗಿದ್ದ. ಸಹಜವಾಗಿ ಕೇಳಿದ ಪ್ರಶ್ನೆ ಅದಾಗಿತ್ತು. ಒಂದು‌ ನಿಟ್ಟುಸಿರು ಬಿಟ್ಟ ರೋಶನಿ “ದೇಶ ವಿದೇಶ ಸುತ್ತಿದರೂ ಗಂಡಸರ‌ ಅನುಮಾನ ಹೋಗಲ್ಲ ಬಿಡು.‌ಅದೇ ಮೊಬೈಲ್ ಹಿಡಿದರೆ ತಕರಾರು.‌ ಕಾಣದ ಸಂಶಯಗಳು ಇದ್ದದ್ದೆ.‌ ಗಂಡಸರಿಗೆ ಎಷ್ಟು ಪ್ರೀತಿ ‌ಕೊಟ್ಟರೂ ,ಸಂಶಯಿಸುವುದ ಬಿಡಲ್ಲ ಎಂದು” ಮೌನವಾದಳು. ತನ್ನ ಸಮಸ್ಯೆಯೂ ಅದೇ ಎಂದು ಹೇಳಬೇಕೆಂದ ಶರ್ಮಿತಾಳ ತುಟಿತನಕ ಬಂದ ಮಾತು ತಡೆದು,‌ಮಾತು ಬದಲಿಸಿದಳು. ಹಾಗೂ  ನೀ‌ನು ಬರೆ ಏನಾದ್ರೂ ಅಂದ್ಲು.‌ “ಹು,‌ ಇನ್ನು ಬರೆಯಬೇಕು. ನೀನು ನಮ್ಮೂರಿಗೆ ಹೆಸರು ತಂದಿದಿಯಾ” .ಅದೇ ಸಂಭ್ರಮ.‌ ನೀ‌‌ ಕೊಟ್ಟ ಕಾವ್ಯದ ಪುಸ್ತಕ ನನ್ನತ್ತೆ ಇಟ್ಟುಕೊಂಡರು. ಅವರ ಮಗಳಿಗೆ ಕೊಡಲು. ನನಗೆ ಮತ್ತೊಂದು ‘ಮಲ್ಲಿಗೆ ದಂಡೆ’ ಕೊಡು ಎಂದು‌ ನಸು‌ನಕ್ಕಳು….ರೋಶನಿ. ಅವಳ ಮಾತಿನ  ಕಣ್ ಮಿಂಚು ಶರ್ಮಿತಾಳ ಎದೆಯೊಳಗೆ ಬೆಳಕು ಹಚ್ಚಿದಂತಾಯಿತು. *********************************

ಮರಳಿ ತವರಿಗೆ Read Post »

ಇತರೆ, ವರ್ತಮಾನ

ಕರೋನ ಅಬ್ಬರದಲ್ಲಿ ಕುಸಲಾಳ ಮನಸ್ಸಿನ ಏಕಾಂತ ಹೊಯ್ದಾಟ..!

ಪ್ರಸ್ತುತ ಕರೋನ ಅಬ್ಬರದಲ್ಲಿ ಕುಸಲಾಳ ಮನಸ್ಸಿನ ಏಕಾಂತ ಹೊಯ್ದಾಟ..! ಕೆ.ಶಿವು.ಲಕ್ಕಣ್ಣವರ ಹೌದಾ.. ನಿಜಾನಾ.. ಇದು ಹೇಗೆ ಸಾಧ್ಯ..? ನಿಜಕ್ಕೂ ಕೊರೊನಾ ವೈರಸ್‌ ಹಿಂದಿರೋ ಕರಾಳ ಸತ್ಯ ಇದೇನಾ..? ಇಡೀ ಜಗತ್ತನ್ನೇ ಕಿರುಬೆರಳಲ್ಲಿ ಆಡಿಸ್ತಿರೋ ಕೊರೊನಾ ವೈರಸ್‌ ಹುಟ್ಟಿನ ಹಿಂದೆ ದೊಡ್ಡ ಷಡ್ಯಂತ್ರವೇ ಇದ್ಯಾ..? ಸೋಶಿಯಲ್ ಮೀಡಿಯಾದಲ್ಲಿ ಕಳೆದೊಂದು ವರ್ಷದಿಂದ ವೈರಲ್ ಆಗ್ತಿರೋ ಒಂದು ವಿಡಿಯೋನ ನೋಡಿದವರ ತಲೆಯಲ್ಲಿ ಇಷ್ಟೊಂದು ಪ್ರಶ್ನೆಗಳು ಹರಿಡಾದ್ತಿವೆ. ಕೊರೊನಾ ವೈರಸ್‌ ಕಾಣಿಸಿಕೊಂಡ ಆರಂಭದಲ್ಲಿ ಶುರುವಾಗಿದ್ದ ಚರ್ಚೆಯೊಂದಕ್ಕೆ ಈ ವಿಡಿಯೋದಿಂದ ಮತ್ತೆ ಪುಷ್ಟಿ ಪುಷ್ಟಿ ನೀಡುತ್ತಿದೆ. ಏನಿದು ವಿಡಿಯೋ..? ಜಗತ್ತು ತಲೆ ಕೆಡಿಸಿಕೊಂಡಿರೋದೇಕೆ..? ಇದು ಆ ಕುಸಲಾಳ ಮನದಾಳದಲ್ಲಿ ಹೀಗೆಯೇ ಆ ಒಂದು ರಾತ್ರಿಯಿಂದ ಪದೆಪದೇ ಮೇಲೇಳಿತ್ತಿರುವ ಪ್ರಶ್ನೆ. ಅದುವೇ ಎಪಿಸೋಡ್‌ 10. 2018ರಲ್ಲಿ ಪ್ರಸಾರವಾದ ವೆಬ್‌ ಸಿರೀಸ್‌ ಇದು. ಸದ್ಯ ಈ ಕಂಟೆಂಟ್‌ ಯುಎಸ್‌ಎ ಹಾಗೂ ಯುಕೆಗೆ ಮಾತ್ರ ಲಭ್ಯವಿದೆ. 10ನೇ ಎಪಿಸೋಡ್‌ನಲ್ಲಿ ಬರುವ ಕೆಲ ಸೀನ್‌ಗಳಲ್ಲಿ ಕೊರೊನಾ ವೈರಸ್‌ನ ಉಲ್ಲೇಖ ಇದೆ. ಈ ವೈರಸ್‌ ಬಗ್ಗೆ, ಅದ್ರ ಹುಟ್ಟಿನ ಬಗ್ಗೆ, ಅದರ ಲಕ್ಷಣಗಳ ಬಗ್ಗೆ ಸಂಭಾಷಣೆ ಇದೆ. ಇದು ಕುಸಲಾಳನ್ನು ಕಂಗೆಡುಸುತ್ತಲೇ ಇದೆ. ಆ ಒಂದು ಕುಸಲಾಳ ಮನಸ್ಸಿನ ನಾಟಕದ ಪಾತ್ರದಾರಿಗಳ ಸಂಭಾಷಣೆ ಕುಸಲಾಳ ಮನಸ್ಸಿನ ಮೇಲೆ ಗಾಯ ಮಾಡಿದವು. ಆ ಪಾತ್ರಧಾರಿಗಳ ಸಂಭಾಷಣೆಗಳು ಹೀಗಿವೆ ನೋಡಿ… ಸೀನ್‌ ನಂಬರ್‌ 1: ಪಾತ್ರಧಾರಿ 1 -ನಾವು ಇದರ ಬಗ್ಗೆ ಮತ್ತಷ್ಟು ಸಂಶೋಧನೆ ಮಾಡಬೇಕಿದೆ. ಪಾತ್ರಧಾರಿ 2 -ಆದ್ರೆ ಅದು ಕೊರೊನಾ ವೈರಸ್‌ ರೀತಿ ಕಾಣುತ್ತಿದೆ..! ಪಾತ್ರಧಾರಿ 1 -ಕೊರೊನಾ..? MERS? ಪಾತ್ರಧಾರಿ 2 -MERS, SARS ಇವು ಸಾಮಾನ್ಯ ಜ್ವರಗಳಾಗಿದ್ವು. ಅವೆಲ್ಲವೂ ಒಂದು ವಿಧಕ್ಕೆ ಸೇರಿದ ಜ್ವರಗಳು. ಅವುಗಳ ಜೀನ್‌ ಇನ್ಫರ್ಮೇಶನ್‌ ಕೂಡ ಒಂದೇ ಆಗಿತ್ತು. ಆದ್ರೆ ಕೊರೊನಾ ವೈರಸ್‌ ರೆಸ್ಪಿರೇಟರಿ ಸಿಸ್ಟಮ್‌( ಉಸಿರಾಟ)ಗೆ ಅಟ್ಯಾಕ್‌ ಮಾಡುತ್ತೆ. 2015ರಲ್ಲಿ MERS ಸಾಂಕ್ರಾಮಿಕ ಕಾಯಿಲೆ ಬಂದಾಗ ಅದರ ಮರಣ ಪ್ರಮಾಣ 20% ಇತ್ತು. ಪಾತ್ರಧಾರಿ 1 -ಆಯುಧವಾಗಿ ಬಳಸೋಕೆ ಅದು ಸಾಕಾಗ್ತಾ ಇರ್ಲಿಲ್ವಾ? ಪಾತ್ರಧಾರಿ 2 -ನಾನ್‌ ಹೇಳಿದ ಹಾಗೆ ಕೊರೊನಾ ರೂಪಾಂತರಗೊಂಡ ವೈರಸ್‌. ಸಾವಿನ ಪ್ರಮಾಣ ಹೆಚ್ಚಾಗುವಂತೆ ಯಾರೋ ಅದನ್ನ ತಿರುಚಿದ್ದಾರೆ. ಇದರ ಮರಣ ಪ್ರಮಾಣ 90%. ಪಾತ್ರಧಾರಿ 1 -90%..!!! ಪಾತ್ರಧಾರಿ 2 -ಕೊರೊನಾ ಬಗ್ಗೆ ಅದಕ್ಕಿಂತಲೂ ಗಂಭೀರ ವಿಚಾರ ಏನು ಅಂದ್ರೆ ಈ ಕೊರೊನಾ ವೈರಸ್‌ ಬೆಳೆಯೋದಕ್ಕೆ 2 ರಿಂದ 14 ದಿನಗಳ ಸಮಯ ತೆಗೆದುಕೊಳ್ಳುತ್ತೆ. ಈ ವೈರಸ್‌ ಕಾಣಿಸಿಕೊಂಡ 5 ನಿಮಿಷಗಳಲ್ಲಿ ನೇರ ಶ್ವಾಸಕೋಶಕ್ಕೆ ಅಟ್ಯಾಕ್‌ ಮಾಡುವಂತೆ ರೂಪಿಸಲಾಗಿದೆ. ಪಾತ್ರಧಾರಿ 1 -ಇದಕ್ಕೆ ಔಷಧ ಇಲ್ವಾ..? ಪಾತ್ರಧಾರಿ 2 -ಈ ಸಮಯದಲ್ಲಿ ಈ ವೈರಸ್‌ಗೆ ಯಾವುದೇ ರೀತಿಯ ವ್ಯಾಕ್ಸಿನ್‌ ಲಭ್ಯವಿಲ್ಲ. ಅದನ್ನ ಅಭಿವೃದ್ಧಿಪಡಿಸೋದು ಕೂಡ ತುಂಬಾ ಕಷ್ಟ. ಸೀನ್ ನಂಬರ್‌ 2: ಪಾತ್ರಧಾರಿ 3 -ಮನುಷ್ಯನೇ ರೂಪಿಸಿದ ವೈರಸ್‌..??? ಪಾತ್ರಧಾರಿ 4 -ಹೌದು. ಪಾತ್ರಧಾರಿ 3 -ಮರಣ ಪ್ರಮಾಣ..? ಪಾತ್ರಧಾರಿ 4 -90% ಪಾತ್ರಧಾರಿ 3 -ಅವ್ರು ಬಯೋಕೆಮಿಕಲ್‌ ಟೆರರಿಸ್ಟ್‌ ಅಟ್ಯಾಕ್‌ಗೆ ಪ್ಲ್ಯಾನ್‌ ಮಾಡ್ತಿದ್ದಾರೆ. ನಾವು ಸಮಯ ಮತ್ತು ಸ್ಥಳವನ್ನು ಫೈಂಡ್‌ ಔಟ್ ಮಾಡಬೇಕು. ಸೀನ್ ನಂಬರ್‌ 3: ಪಾತ್ರಧಾರಿ 5 -ನಾನು ಮನುಷ್ಯನ ದೇಹದ ಮೇಲಿನ ಟೆಸ್ಟ್‌ನ ಪೂರ್ತಿ ಮಾಡಿದ್ದೇನೆ. ಪಾತ್ರಧಾರಿ 6 -ಹೇಗಾಯ್ತು ಟೆಸ್ಟ್‌..? ಪಾತ್ರಧಾರಿ 5 -ನಾವು ಜೆನೆರಿಕ್‌ ಮೆಟೀರಿಯಲ್‌ನ ಯಶಸ್ವಿಯಾಗಿ ಆತನ ದೇಹಕ್ಕೆ ಇಂಜೆಕ್ಟ್‌ ಮಾಡಿದ್ವಿ. ಕೋರ್ಸ್‌ ಪ್ರಾಜೆಕ್ಟ್‌ನ ಸ್ಟಾರ್ಟ್ ಮಾಡೋಕೆ ಇದು ಸೂಕ್ತ ಸಮಯ. ಇವಿಷ್ಟು ಪಾತ್ರಧಾರಿಗಳ ನಡುವೆ ಬರುವ ಸಂಭಾಷಣೆ. ಸೌತ್‌ ಕೊರಿಯಾದ ಭದ್ರತಾ ಸಂಸ್ಥೆಯ (ಎನ್‌ಎಸ್‌ಎ – ನ್ಯಾಷನಲ್‌ ಸೆಕ್ಯುರಿಟಿ ಏಜೆನ್ಸಿ) ಏಜೆಂಟ್‌ ಒಬ್ಬನ ಸ್ನೇಹಿತ ನಿಗೂಢವಾಗಿ ಸಾವನ್ನಪ್ಪಿರ್ತಾನೆ. ಈ ವಿಚಾರದ ಬಗ್ಗೆ ಎನ್‌ಎಸ್‌ಎ ತನಿಖೆ ಆರಂಭ ಮಾಡಿದಾಗ ಶತ್ರುಗಳು ಕೊರೊನಾ ವೈರಸ್‌ನ ಬಯೋಕೆಮಿಕಲ್‌ ವೆಪನ್‌ ಆಗಿ ಬಳಸಿದ್ದಾರೆ ಅನ್ನೋದು ಬೆಳಕಿಗೆ ಬರುತ್ತೆ. ಇದು ಒಂದು ಕುಸಲಾಳ ಮನಸ್ಸಿನ ವೆಬ್‌ ಸಿರೀಸ್‌ನ ಆ ಎಪಿಸೋಡ್‌ನಲ್ಲಿ ಬರುವ ಸ್ಟೋರಿ. ಅಚ್ಚರಿಯ ವಿಷಯ ಏನು ಅಂದ್ರೆ ಚೀನಾದಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿದ್ದು 2019ರ ನವೆಂಬರ್‌ನಲ್ಲಿ. ಆದ್ರೆ ಈ ವೆಬ್‌ ಸಿರೀಸ್ ಪ್ರಸಾರವಾಗಿದ್ದು 2018ರಲ್ಲಿ ಇದು ಹೇಗೆ ಸಾಧ್ಯ? ಕೊರೊನಾ ವೈರಸ್‌ ಬಗೆಗಿನ ಭವಿಷ್ಯವಾಣಿಗಳು ಈ ಹಿಂದೆಯೇ ಕೆಲವು ಬಂದಿದ್ರೂ ಕೂಡ ಈ ವೆಬ್‌ ಸಿರೀಸ್‌ನಲ್ಲಿ ಹೇಳಿರುವ ಡೈಲಾಗ್‌ಗಳು ಕರಾರುವಕ್ಕಾಗಿವೆ. ಇದು ಯಾರದ್ದೋ ಷಡ್ಯಂತ್ರದ ಫಲ ಅನ್ನೋದನ್ನ ಸಿನಿಮಾ ಡೈಲಾಗ್‌ ಅಂದ್ರೂ ಕೊರೊನಾದ ಬಗ್ಗೆ ಹೇಳಿರೋ ಲಕ್ಷಣಗಳು 100ಕ್ಕೆ 100ರಷ್ಟು ಸತ್ಯ. ಇದು ಹೇಗೆ ಸಾಧ್ಯ..? ‘ಕೊರೊನಾ’ ಸೃಷ್ಟಿಸಿದ್ದೇ ಚೀನಾ ಅಂದಿದ್ರು ಹಲವರು..! ಕೊರೊನಾ ಕಾಣಿಸಿಕೊಂಡ ಆರಂಭದಲ್ಲಿ ಚೀನಾದವರೇ ಈ ವೈರಸ್‌ನ ತಮ್ಮ ಲ್ಯಾಬ್‌ನಲ್ಲಿ ರೂಪಿಸಿದ್ರು. ಜಗತ್ತಿನ ಮೇಲೆ ಇದ್ರ ಮೂಲಕ ದಾಳಿ ನಡೆಸೋಕೆ ಮುಂದಾಗಿದ್ರು. ಆದ್ರೆ ಬೈ ಮಿಸ್ಟೇಕ್‌ ಅಲ್ಲಿನ ಲ್ಯಾಬ್‌ನಿಂದಲೇ ವೈರಸ್‌ ಲೀಕ್‌ ಆಗಿದೆ ಅನ್ನೋ ವದಂತಿಗಳು ಹರಿದಾಡಿದ್ವು. ಅದ್ರ ಸತ್ಯಾಸತ್ಯತೆ ಯಾರಿಗೂ ಗೊತ್ತಿಲ್ಲ. ಆದ್ರೀಗ ವೆಬ್‌ಸಿರೀಸ್‌ನಲ್ಲಿ ತೋರಿಸಿರುವ ಷಡ್ಯಂತ್ರದ ಸೀನ್‌, ನಿಜಕ್ಕೂ ಹಾಗೆಯೇ ಆಗಿದ್ಯಾ ಅನ್ನೋ ಅನುಮಾನ ಹುಟ್ಟುಹಾಕಿದೆ. ಚೀನಾದಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್‌ಗೂ ಸೌತ್ ಕೊರಿಯಾದ ವೆಬ್‌ ಸಿರೀಸ್‌ಗೂ ಏನ್‌ ಸಂಬಂಧ..? ನೆಟ್‌ಫ್ಲಿಕ್ಸ್‌ನಲ್ಲಿ ಈ ಬಗ್ಗೆ ಸ್ಟೋರಿ ಬಂದಿದೆ ಅಂದ್ರೆ ಇದ್ರ ಬಗ್ಗೆ ಮೊದಲೇ ಅರಿವಿತ್ತು ಅಂತ ಅರ್ಥ. ಅದು ಗೊತ್ತಿದ್ದೂ ಮುಂಜಾಗ್ರತ ಕ್ರಮ ತೆಗೆದುಕೊಳ್ಳೋಕೆ ತಡವಾಗಿದ್ದು ಏಕೆ? ಇಡೀ ಚೀನಾಗೆ ಹಬ್ಬುವವರೆಗೂ ಯಾಕೆ ತಲೆಕೆಡಿಸಿಕೊಂಡಿರಲಿಲ್ಲ. ಇಡೀ ಜಗತ್ತಿಗೇ ವೈರಸ್‌ ಈಗ ಹರಡಿಬಿಟ್ಟಿದೆ. ಆರ್ಥಿಕತೆಗೆ ದೊಡ್ಡ ಹೊಡೆತ ನೀಡಿದೆ. ಇದ್ರ ಹಿಂದೆ ನಿಜಕ್ಕೂ ಷಡ್ಯಂತ್ರ ಇದ್ದಿದ್ದು ಹೌದಾ ಅನ್ನೋ ಬಗ್ಗೆ ನೆಟ್ಟಿಗರು ಈಗ ತಲೆಕೆಡಿಸಿಕೊಳ್ತಿದ್ದಾರೆ. ಹೀಗೆಯೇ ಆ ಕುಸಲಾಳ ಏಕಾಂತ ಮನಸ್ಸಿನ ಅಲೆಗಳು ಏಳುತ್ತಲೇ ಇದ್ದವು. ಆ ಏಕಾಂತ ಮನಸ್ಸಿನ ತಾಕಲಾಟ ತಾಳಲಾರದೇ ಅವಳು ದಿಗ್ಗನೇ ಆ ಒಂದು ಬೆಡ್ ರೂಮಿನಿಂದ ಎದ್ದು ಹೊರ ಬಂದು ದೇವಾಲಯಕ್ಕೆ ಹೊರಡಲು ಅಣಿಯಾದಳು. ದೇವಾಲಯಕ್ಕೆ ಹೋಗಿ ಆ ದೇವರ ದರ್ಶನ ಪಡೆದುಕೊಂಡು ಮನಸ್ಸಿನಲ್ಲೇ ಆ ದೇವರನ್ನು ಬೇಡಿಕೊಂಡಳು ಅಯ್ಯೋ ದೇವರೇ ಈ ಕರೋನ ಸಂದರ್ಭದಲ್ಲಿ ನೀನೇ ಗತಿ ಈಗ ನಮಗೆ. ನಮ್ಮನ್ನು ಅಂದರೆ ಮಾನವರನ್ನು ನೀನೇ ಕಾಪಾಡಪಾ ಈಗ. ಹೀಗೆಯೇ ಆ ದೇವರನ್ನು ಬೇಡಿಕೊಳ್ಳುತ್ತಲೇ ಮಕ್ಕಳು ಮತ್ತು ಗಂಡನು ಆಫೀಸಿನಿಂದ ಮನೆಗೆ ಬರುವುದು ಸಮಯವಾಗಿದೆ ಎಂದು ದೇವಸ್ಥಾನದಿಂದ ಮನೆಗೆ ವಾಪಾಸಾದಳು ಕುಸಲಾಳು… *************************************

ಕರೋನ ಅಬ್ಬರದಲ್ಲಿ ಕುಸಲಾಳ ಮನಸ್ಸಿನ ಏಕಾಂತ ಹೊಯ್ದಾಟ..! Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ರವಿ.ವಿಠ್ಠಲ. ಆಲಬಾಳ. ತುಸು ಹೊತ್ತು ಕಳೆದೆ ,ತುಸು ದೂರ ನಡೆದೆ ,ಸಾಕಿಂದಿಗೆ ಈ ಪ್ರೀತಿಮೋಹಕ ನಗುವಿನಲಿ ಚೆಲುವೆಲ್ಲ ನೋಡಿದೆ ,ಸಾಕಿಂದಿಗೆ ಈ ಪ್ರೀತಿ. ಭಣಗುಡುವ ಎದೆಯಿಂದು ಉಲ್ಲಾಸವನು ತುಂಬಿ ತುಳುಕಿಸಿದೆತುಟಿಕೆಂಪಿನಲಿ ಹೊಸ ಮಿಂಚು ಕಾಣುತಿದೆ ,ಸಾಕಿಂದಿಗೆ ಈ ಪ್ರೀತಿ. ಕಳೆಕಟ್ಟಿಕೊಂಡು ಕಾಣುವ ಕನಸುಗಳಿಗೆ ಸಾವಿರದ ನೆನಕೆ ತಿಳಿಸುವೆಸವಿ ದಿನಗಳ ಕ್ಷಣವನು ತಿರುವಿ ಹಾಕುತಿದೆ ಸಾಕಿಂದಿಗೆ ಈ ಪ್ರೀತಿ . ಏನೆಲ್ಲ ಹೇಳಿದೆ,ಏನೆಲ್ಲ ಕೇಳಿದೆ ,ಬರೀ ಮಾತುಗಳಾಗೇ ಉಳಿದಿವೆದೂರವಿದ್ದರೂ ಸರಿಯೇ ,ನಿನ್ನ ಬಿಂಬ ಇಲ್ಲಿದೆ ಸಾಕಿಂದಿಗೆ ಈ ಪ್ರೀತಿ. ನೀ ಹೊರಟು ಹೋಗುವಾಗ ಕಣ್ಣೀರಲಿ ಎಷ್ಟೋ ಮಾತುಗಳಿದ್ದವುಧ್ವನಿಯಿಲ್ಲದ ಪದಗಳಲ್ಲಿ ಪ್ರೇಮವನೇ ಸುರಿದೆ ಸಾಕಿಂದಿಗೆ ಈ ಪ್ರೀತಿ. ಮರೆತುಬಿಡಲು ಹೃದಯವಿಲ್ಲದ ದೇಹ ನನ್ನದಲ್ಲ ಕೇಳು ಪ್ರಿಯತಮೆರವಿ ಹುಟ್ಟಿ ಮುಳುಗುವವರೆಗೆ ನಿನ್ನ ಗುಂಗಿದೆ ಸಾಕಿಂದಿಗೆ ಈ ಪ್ರೀತಿ. *********************

ಗಜಲ್ Read Post »

ಕಥಾಗುಚ್ಛ

ದನ ಕಾಯೋದಂದ್ರ ಏನ ಮ್ಮ

ಕಿರುಗಥೆ ದನ ಕಾಯೋದಂದ್ರ ಏ‌ನಮ್ಮ ರಶ್ಮಿ .ಎಸ್. ಅರ್ನಿ, ಹೋಂವರ್ಕ್‌ ಮಾಡಿಲ್ಲ… ಇಲ್ಲಮ್ಮ… ಮಾಡಾಂಗಿಲ್ಲ? ಇಲ್ಲಮ್ಮ… ಆಯ್ತು ಹಂಗಾರ… ನಾಳೆಯಿಂದ ಸಾಲೀಗೆ ಹೋಗಬ್ಯಾಡ… ದನಾ ಕಾಯಾಕ ಹೋಗು… ದನಾ ಕಾಯೂದಂದ್ರೇನಮ್ಮ.. ದನಾ ಕಾಯೂದಂದ್ರ ಒಂದು ನಾಲ್ಕು ಎಮ್ಮಿ ಕೊಡಸ್ತೀನಿ. ಎಮ್ಮಿ ಎಲ್ಲೆಲ್ಲಿ ಅಡ್ಡಾಡ್ತಾವ ಅಲ್ಲೆಲ್ಲ ಅದರ ಹಿಂದ ಹಿಂದೇ ಅಡ್ಯಾಡಬೇಕು. ಶಗಣಿ ಹಾಕಿದ್ರೂ, ಸುಸು ಮಾಡಿದ್ರೂ ಅದರ ಜೊತಿಗೇ ಇರಬೇಕು. ಶಗಣಿ ಹಾಕೂದಂದ್ರ? ಎಮ್ಮಿ ಕಕ್ಕಾ ಮಾಡೂದು.. ಅವಾಗೂ ಬಿಟ್ಟು ಹೋಗೂಹಂಗಿಲ್ಲಾ? ಇಲ್ಲ… ಓಹ್‌… ಆಸಮ್‌…ನಾ ಎಮ್ಮೀ ಜೊತೀಗೆ ಇರಬೇಕು.. ಹೌದು… ಅಮ್ಮಾ.. ಹಂಗಾರ ನಾ ಎಮ್ಮೀ ಒಲ್ಲೆ… ಅಮ್ಮಾನ ಕಾಯ್ತೀನಿ. ನೀ ಎಲ್ಲಿ ಹೋದ್ರೂ ನಿನ್ನ ಹಿಂದ ಇರ್ತೀನಿ. ಆಫೀಸಿಗೆ ಬರ್ತೀನಿ. ಮನ್ಯಾಗೂ ನಿನ್ನ ಜೊತಿಗೆ ಇರ್ತೀನಿ. ಬಾತ್‌ರೂಮಿಗೂ ಬರ್ತೀನಿ… ಪ್ಲೀಸ್‌ ಅಮ್ಮಾ… ನಾ ಅಮ್ಮಾಗ ಕಾಯ್ತೀನಿ. ಬೇಕಂದ್ರ ಅಪ್ಪಾಗೂ ಕಾಯ್ತೀನಿ… ಸಾಲೀ ಒಲ್ಲೆ… ……

ದನ ಕಾಯೋದಂದ್ರ ಏನ ಮ್ಮ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ (ಸಂಪೂರ್ಣ ಮತ್ಲಾ ಗಜಲ್) ಸಿದ್ಧರಾಮ ಹೊನ್ಕಲ್ ನನ್ನ ಸಖಿ ಈ ಜಗದಿ ಅಪರೂಪ ಏನನೂ ಬೇಡಳುಕೊಡುವೆ ಅಂದಾಕ್ಷಣವೇ ಕೋಪದಿ ಕ್ಷಣ ಮುನಿವಳು ಏನು ಕೊಟ್ಟರು ಕಡಿಮೆ ಅವಳಿಗೆ ಅಂತಹ ಗುಣದವಳುಮುಳ್ಳು ತರಚುವ ಮೃದು ಮಧುರ ಗುಲಾಬಿ ಅಂಥವಳು ಬೇಡ ಕೊಟ್ಟಷ್ಟು ಆಸೆ ಬೆಳಿವವು ಅಂದು ಕೊಂಡಿಹಳುಆಸೆಯೇ ಇಲ್ಲದ ಅಪ್ಪಟ ಬಂಗಾರು! ನನಗೆ ಸಿಕ್ಕಿಹಳು ತಾ ಕೊಡುವದರಲು ಹೀಗೆ ಬಲೂ ಕಂಜೂಸಿ ಮನದವಳುಮಾತೇ ಮುತ್ತಾಗಿಸಿದವಳು ಬೇಗ ಮುತ್ತು! ಸಹ ನೀಡಳು ಅಭಿಮಾನದಿ ಪ್ರೀತಿ ಪ್ರೇಮದ ಹೊಳೆಯ ಹರಿಸುವಳುಹೊಟ್ಟೆ ಬಟ್ಟೆ ದೇಹ ಬದುಕು ಬರಹ ಚೆಂದ ಮಾಡಿಹಳು ನೋವುಗಳ ನುಂಗಿಬಿಟ್ಟು ಬರೀದೆ ನಗು ನಟಿಸುವಳುಆಗಾಗ ಸಿಟ್ಟು ಸೆಡವು ಹುಸಿ ಕೋಪವು ತೋರುವಳು ಬದುಕಲಾರೆ ಬಿಟ್ಟಿರಲಾರೆ ಈ ಜೀವದ ಜೀವವವಳುಎಲ್ಲಿಯದೋ ಈ ಬಂಧ ಅನುಬಂಧ ಆಗಿಸಿದವಳು ಇದ್ದಲ್ಲೆ ಕಡು ಒಲವಿನ ಮೋಹದ ಮಳೆ ಸುರಿಸುವಳುಹೊನ್ನಸಿರಿ’ಮನ ಸರೋವರದಿ ಶಾಂತ ಇರಿಸುವಳು *******************

ಗಜಲ್ Read Post »

ಕಥಾಗುಚ್ಛ

ನಿರುತ್ತರ

ಕಥೆ ನಿರುತ್ತರ ಚಂದ್ರಿಕಾ ನಾಗರಾಜ್  ಹಿರಿಯಡಕ ಸೆರಗಿನಲ್ಲಿ ಹೆರಕಿ ತಂದಿದ್ದ ಹೂವುಗಳನ್ನು ಒಂದೊಂದಾಗಿಯೇ ತನ್ನ ಪಾಡಿಗೆ ತಾನು, ಹಮ್ಮು ಬಿಮ್ಮಿಲದೇ, ಪ್ರಫುಲ್ಲ ಮನಸ್ಥಿಯಲ್ಲಿ ಹರಿಯುತ್ತಿದ್ದ ತೊರೆಯಲ್ಲಿ ಹರಿಯ ಬಿಡುತ್ತಿದ್ದೆ. ಅದು ಹೂವ ಚಿತ್ತಾರದ ಸೀರೆಯುಟ್ಟ ನೀರೆಯಂತೆ ಬಳುಕುತ್ತಾ ಸಾಗುತ್ತಿತ್ತು.  ನಾನೇಕೋ ಇಂದು ಅದನ್ನು ಆಸ್ವಾದಿಸುವ ಮನಸ್ಥಿತಿಯಲ್ಲಿ ಇಲ್ಲ.  ಕೈಗಳು ಶಾಂತವಾಗಿ ತೊರೆಯ ಮೈ ಸವರುತ್ತಿತ್ತಷ್ಟೆ, ಮನವು ಪ್ರಕ್ಷುಬ್ಧ ಕಡಲಾಗಿತ್ತು.  ದುಃಖ ಹೆಪ್ಪು ಗಟ್ಟಿತ್ತು. ಅದು ಒಡೆದು ಹೋಗಲು ಅವನೇ ಬರಬೇಕು‌.  ಅವನ ಮೈಗಂಧವ  ತಂಗಾಳಿ ನನ್ನ ನಾಸಿಕಗಳಿಗೆ ಸವರಿ ಹೋದರೆ ಸಾಕು ನಾನು ಅದಾಗಲೇ ನಿಟ್ಟುಸಿರಾಗಬಲ್ಲೆ…ಅವನ ಹೆಜ್ಜೆಯ ಸಪ್ಪಳವ ತರಗೆಲೆಗಳು ಮೆತ್ತಗೆ ಚೀರಿ ಕಿವಿಗೆರೆದು ಹಾರಿದರೆ ಸಾಕು ನಾನು ಚುರುಕಾಗಬಲ್ಲೆ  ಇತರೆಡೆ ಗಮನವ ಹರಿಸದೆ ಪಂಚೇಂದ್ರೀಯಗಳು ಕೇವಲ ಆತನ ಹಾದಿಯತ್ತ ತಮ್ಮ ಚಿತ್ತ ಹರಿಸಿವೆ. ಬರಲಿ ಆತ, ಒಂದೊಮ್ಮೆ ಎದುರು ನಿಲಲಿ…ಇರುಳಲಿ ನಿಶಾಚರ ಪ್ರಾಣಿಯಂತಾಗಿದ್ದ ಮನವು ಆತನೆದೆಯಲಿ ನಿದ್ರಿಸಿಬಿಡುವುದೋ…ಮುಂಜಾವಿನಲಿ, ಹಕ್ಕಿಗಳಿಂಚರದಿ ಬೆರೆತು ತಾನು ಹಾಡಾಗದೆ ಉಳಿದ ದನಿ ಮಾತಾಗುವುದೋ…ಅಪರಾಹ್ನದಿ ಸೂರ್ಯದೇವನ  ತಾಪದಲಿ ಮಿಂದು ಬೆಂದಿರುವ ಈ ಒಡಲು ಅವನ ಸುಕೋಮಲ ಸ್ಪರ್ಷಕೆ ತಣಿದು ಕಡಲಾಗುವುದೋ… ಮುಸ್ಸಂಜೆಯ ಈ ರಂಗು ಕೆನ್ನೆಗಂಟಿ ಲಜ್ಜೆಯ ಮಜ್ಜೆಯಾಗುವುದೋ…ಅಥವಾ ವಿರಹದ ಕುಪಿತತೆಯ ಕುರುಹಾಗುವುದೋ…  ಹ್ಹ ಹ್ಹ! ನಿನ್ನ ಬಗೆಗೆ ನನಗೆ ಗೊತ್ತಿಲ್ಲವೇ!.. ಅವನು ಬರುತ್ತಾನೆ..ಒಂದೋ ನೀನವನನ್ನು ನೋಡಿ ಮುಖವ ಸಿಂಡರಿಸುತ್ತಿಯೇ…ಅವನು ಬಳಿ ಬಂದಂತೆ ಒಂದು ಮೋಡ ಮಗದೊಂದು ಮೋಡವ ಬೆಂಬತ್ತುವಂತೆ ನಿಮ್ಮಿಬ್ಬರ ಆಟ ನಡೆಯುತ್ತದೆ. ಮತ್ತೆ ಅವು ಸೇರಲೇ ಬೇಕಲ್ಲವೇ…ಇಲ್ಲವಾದಲ್ಲಿ, ಅವನು ಬರುತ್ತಿರುವಂತೆ ಪಂಜರದಿಂದ ಹೊರಬಿಟ್ಟ ಪಕ್ಷಿಯಂತೆ, ಬೇಡನಿಟ್ಟ ಬಲೆಗೆ ಸಿಲುಕಿದ ಜಿಂಕೆಯೊಂದ ಅದು ಯಾರೋ ಬಿಡಿಸಿದಾಗ  ಛಂಗನೆ ನೆಗೆಯುತ್ತದೆ ನೋಡು ಹಾಗೆ ನೀನು ಓಡಿ ಹೋಗಿ ಆತನ ಯೋಗ ಕ್ಷೇಮ ವಿಚಾರಿಸುತ್ತೀಯೇ, ಸೂರ್ಯ ದೇವನು ತನ್ನೊಡಲ ಸೇರಲು ಕಡಲ ಮೈಬಣ್ಣ ರಂಗೇರುವಂತೆ,  ಅವನ ಮೊಗದಲ್ಲರಳೋ ಕಿರುನಗೆ ನಿನ್ನ ಮೊಗದಲ್ಲಿ ನಸುಗೆಂಪ ಹಮ್ಮಿಸುತ್ತದೆ. ಅಲ್ಲವೇ…!? ಮನದ ಮಾತುಗಳು ಕಲ್ಪನಾ ರೂಪದಲ್ಲಿ ದೃಶ್ಯಗಳಾಗಿ ನಯನಗಳ ಮುಂದೆ ಚಲಿಸಿದಾಗ ನಾನು ಪಿಸು ನಕ್ಕು ತಣ್ಣಗೆ ಹರಿಯುತ್ತಿದ್ದ ತೊರೆಯೊಳಗೆ ಕಾಲ ಇಳಿಬಿಟ್ಟು ಹರ್ಷಿಸಲಾರಂಭಿಸಿದೆ. ಅಷ್ಟರಲ್ಲಾಗಲೆ  ಮೀನುಗಳು ನನ್ನ ಪಾದೋಪಚಾರಕ್ಕೆ ತೊಡಗಿಕೊಂಡವು. ನನ್ನೊಳಗೆ ಕಚಗುಳಿಯ ಅನುಭೂತಿ…ಮೆಲ್ಲನೆ ಬಾಗಿ ನೀರ ಬೊಗಸೆಯಲಿ ಹಿಡಿದು ನೋಡಿದೆ ನನ್ನದೇ ಪ್ರತಿಬಿಂಬ…ಕಾಯುವಿಕೆಯಲಿ ನೋಟವ ನೆಟ್ಟು  ಕಳೆಗುಂದಿರುವ ನೇತ್ರಗಳು…ಚಿಂತನೆಗಳಲಿ ಗಂಟು ಕಟ್ಟಿರುವ ಹುಬ್ಬು, ನೊಸಲು…ಒಲವ ಸುಗಂಧಕ್ಕೆ ಕಾದು ಸೋಲೊಪ್ಪಿಕೊಂಡಿರುವ ನಾಸಿಕ…ಸಾವಿರ ಮಾತುಗಳ ಆಡುವ ತವಕತೆ ಮರೆಯಾಗಿ ಮೌನಕ್ಕೆ ಶರಣಾಗಿರುವ ತುಟಿಗಳು…ನೀರುಣ್ಣದೆ ಬಾಡಿದ ನೈದಿಲೆಯಂತಾಗಿರುವ ಮುಗುಳ್ನಗೆಗೆ ಹಿಗ್ಗಬೇಕಾಗಿದ್ದ ಕೆನ್ನೆ ಗಲ್ಲಗಳು…ಹೌದು, ನಿರೀಕ್ಷೆಗಳು ಸುಡುತ್ತವೆ. ಚಿಂತೆ, ಚಿಂತನೆಗಳನ್ನು ಸೀಳಿ ಆ ಗಾನ ಹೊಮ್ಮಿತು…ಕೊಲ್ಮಿಂಚೊಂದು ಬಂದು ಅಂಧಕಾರದಿ ಬೆವಿತಿರೋ ಜಗವ ಒಮ್ಮೆಗೆ ಬೆಳಗಿ ಹೋದಂತೆ ನನ್ನೊಳಗೆ ಭಾಸವಾಯಿತು. ಮುರಳಿಯ ಗಾನ…ಇದೇ ರಾಗಕೆ ಕಾಯುತ್ತಿದ್ದ ಕರ್ಣಗಳು ನೆಟ್ಟಗಾದವು, ಕಂಗಳು ಮಿಂಚಿದವು, ನಾಸಿಕ ಕೆರಳಿದವು, ತುಟಿಗಳು ಅರಳಿದವು…ಅತ್ತ ಹೊರಟೆ…ಹೌದು, ಇದು ಅವನದೇ ವೇಣುವಿನ ನಾದ…ಇಷ್ಟು ಕಾಯಿಸಿ, ಸತಾಯಿಸಿ ಇದೀಗ ಬಂದನೇ…ಒಡತಿ ಹಾಕುವ ಕಾಳಿಗಾಗಿ ಹಸಿವಿನಿಂದ ಕಾದು ಕೂರುವ ಪಂಜರದ ಶುಕದಂತೆ ನಾನು ಚಡಪಡಿಸಿ ಬಿಟ್ಟೆನಲ್ಲಾ…ನಾನೇ ಬಳಿ ಸಾಗಿ ಬರಲೆಂದು ಅಲ್ಲೆಲ್ಲೋ ಕುಳಿತು ಸುನಾದ ನುಡಿಸುತ್ತಿದ್ದಾನಲ್ಲಾ ಎಂದು ಹುಸಿಗೋಪ ನಟಿಸುತ್ತಾ ನಡೆದೆ…ಇದೀಗಲೇ ಹೋಗಿ ಅವನ ಹೆಗಲಿಗೊರಗಿ ಜಗವ ಮರೆಯಬೇಕು! ಪಾದಗಳು ಅದ್ಯಾವುದೋ ಶಕ್ತಿ ಒಲಿದಿರುವಂತೆ  ಹೆಜ್ಜೆ ಇಡುತ್ತಿದ್ದವು. ಆಗಲೇ ಆ ದೃಶ್ಯ ಕಾಲುಗಳಿಗೆ ವಿರಾಮ ನೀಡಿತು.  ಎಂತಹ ತನ್ಮಯತೆ! ಜಗವ ಮರೆಯಿಸಿ, ತಾನೂ  ಮರೆತಿರುವ ಜಗದ್ದೋದ್ಧಾರಕ..! ಇಳಿ ಸಂಜೆಯಲಿ ತಂಗಾಳಿಯ ಹಾಸುತ್ತಿರುವ ಹಸನ್ಮುಖಿ! ಜೊತೆಗೆ ಅವನ ಮಡಿಲಲಿ ತಲೆ ಇಟ್ಟು ಕಣ್ಣೆವೆಗಳ ಮುಚ್ಚಿ ಅದ್ಯಾವುದೋ ಅವ್ಯಾಹತ ಆನಂದದಿ ಮುಳುಗಿರುವ ದೇವಿ ರುಕ್ಮಿಣಿ. ಹೆಗಲು ಖಾಲಿ…! ಆದರೆ!? ಅವನ ಮನ ತುಂಬಿದೆಯಲ್ಲವೇ..?  ಹಿಂತಿರುಗಿ ನಡೆದೆ… ನಾ ರಾಧೆ… ****************************

ನಿರುತ್ತರ Read Post »

You cannot copy content of this page

Scroll to Top