ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ದಿವ್ಯ ಅನಿಕೇತನ

ಕವಿತೆ ದಿವ್ಯ ಅನಿಕೇತನ ನೂತನ ದೇಹ ಆತ್ಮಗಳು ಮಾತಾಡಿಕೊಂಡವುನನ್ನೊಳಗೆ ನೀನೊನಿನ್ನೊಳಗೆ ನಾನೊ? ಯಾರೊಳಗೆ ಯಾರಿದ್ದರೇನುಇದ್ದೂ ಇರದಂತೆ ಇರುವವರೆಷ್ಟಿಲ್ಲ !ರೇಷಿಮೆಯ ಸಣ್ಣ ಅಂಚಿನ ಪತ್ತಲನಿಟ್ಟುಸಿರ ಬಿಡುವುದ ಕಾಣದಂತೆ ನಾವೀರ್ವರು ಒಂದಾದ ಕ್ಷಣಕ್ಕೆಹುಣ್ಣಿಮೆಯೇ ಸಾಕ್ಷಿಛಾಯೆ ಕನವರಿಸುತ್ತಾಳೆನೂರ್ಕಾಲದ ಬಾಳಿಗೆ ಹೊರನೋಟಕ್ಕೆ ಒಂದಾದರೆಒಳ ಹರಿವಿಗೆ ಒಂದು ನಾನು ನೀನೆಂಬಗಡಿಯಿರದ ಗೂಡಿನಲಿಜೇನು ಸವಿ ಹೀರಲುದೇಹದೊಲುಮೆಯಲಿಆತ್ಮಜ್ಯೋತಿ ಬೆಳಗಬೇಕು ಸದಾ ಆತ್ಮ ಬಿರಿದು ಕಣಕಣದಲಿ ಬೆಳೆದುಮಿಲನವ ಮೀರಿ ನಿಂತುಈಗ ಸರ್ವವ್ಯಾಪಿಬೇಧವಿರದ, ಬಂಧವೂ ಇರದದಿವ್ಯ ಅನಿಕೇತನ **************************

ದಿವ್ಯ ಅನಿಕೇತನ Read Post »

ಅಂಕಣ ಸಂಗಾತಿ, ಮುಖಾಮುಖಿ

ಅಂಕಣ ಬರಹ ಒಮ್ಮೊಮ್ಮೆ ಪಾತ್ರೆ ತಿಕ್ಕುವಾಗಲೂ ಕವಿತೆಯ ಹೊಳಹುಗಾಣುತ್ತದೆ ಹೇಮಲತಾ ವಸ್ತ್ರದ. ಪರಿಚಯ: ಎಂಎ, ಎಂಇಡಿ, ಪಿಜಿ ಡಿಪ್ಲೋಮಾ ಇನ್ ಇಂಗ್ಲಿಷ್. ವಿಜಯಪುರ ಗ್ರಾಮೀಣ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿದ್ದಾರೆ. ಊರು: ಸಿಂದಗಿ.  ಜಿಲ್ಲೆ: ವಿಜಯಪುರ. ಕೃತಿಗಳು: ಅವ್ವನಿಗೊಂದು ಪತ್ರ (ಕವನಸಂಕಲನ). ಪೃಥ್ವಿಯೊಡಲು(ಕಥಾಸಂಕಲನ)(ಅಚ್ಚಿನಲ್ಲಿದೆ). ಗಜಲ್ ಸಂಕಲನಅಚ್ಚಿನಲ್ಲಿದೆ. ಅಕ್ಕನಾಗಮ್ಮ (ನಾಟಕ)(ಅಚ್ಚಿನಲ್ಲಿ) ಶೈಕ್ಷಣಿಕ, ಸಾಹಿತ್ಯಕ ಲೇಖನಗಳು. ಮಕ್ಕಳ ಕಥೆಗಳು, ಕವನಗಳು. ಕ್ರೀಯಾಸಂಶೋದನೆ (ಬಾಲಕಾರ್ಮಿಕಪದ್ಧತಿ). ಗುಲ್ಬರ್ಗಾ ವಿಶ್ವವಿದ್ಯಾಲಯ ದ ಎಂಎ ಮೂರನೇ ಸೆಮ್ (ಆಧುನಿಕ ಕಾವ್ಯ ಸಂಗ್ರಹ-೨೦೧೨) ಗೆ ಕನ್ನಡಗಜಲ್ಗಳು, ಕವನಗಳು ಪಠ್ಯವಾಗಿವೆ.  ಪ್ರಜಾವಾಣಿ, ಮಯೂರ, ವಿಜಯಕರ್ನಾಟಕ ಇತ್ಯಾದಿ ಪತ್ರಿಕೆಗಳಲ್ಲಿ ಕವನ, ಗಜಲುಗಳು ಮತ್ತು ಲೇಖನಗಳು ಪ್ರಕಟವಾಗಿವೆ. ಚಂದನ ದೂರದರ್ಶನದ  ಕವಿಗೋಷ್ಠಿಗಳಲ್ಲಿ ಕವನ ವಾಚನ ಮಾಡಿದ್ದಾರೆ.‌ ಅಕ್ಕಮಹಾದೇವಿ ವಿ.ವಿ, ಗುಲ್ಬರ್ಗ ವಿ.ವಿ, ಕನ್ನಡ ಸಾಹಿತ್ಯ ಪರಿಷತ್ತು, ಶರಣ ಸಾಹಿತ್ಯ ಪರಿಷತ್ತು ಇತ್ಯಾದಿಗಳಲ್ಲಿ ಉಪನ್ಯಾಸ. ವಿಜಯಪುರ ಆಕಾಶವಾಣಿಯಲ್ಲಿ ಚಿಂತನಗಳ ಪ್ರಸಾರ. ಕಥೆ, ಕವನಗಳ ಪ್ರಸಾರವಾಗಿವೆ. ಸಂದ ಗೌರವಗಳು : ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ (2018). ಹಾಗೂ ಶಿಕ್ಷಣ ಕ್ಷೇತ್ರದ ‘ಗುರುಶ್ರೇಷ್ಠ ‘ ಪುರಸ್ಕಾರ.(2017) ಸಂದರ್ಶನ: ಧಮಿನಿಸಲ್ಪಟ್ಟ ಎಲ್ಲದಕ್ಕೂ ದನಿಯಾಗುವ ಹಂಬಲ ನನ್ನ ಕವಿತೆಗೆ ನೀವು ಕವಿತೆಗಳನ್ನು ಯಾಕೆ ಬರೆಯುವಿರಿ?  ಬರೆದಾದ ಮೇಲಿನ ನನ್ನ ತುಡಿತ ಕಡಿಮೆಯಗುವುದಕ್ಕೆ.  ಸಿಗುವ ತೃಪ್ತಿ, ಸಮಾಧಾನಕ್ಕೆ,. ಕಿಂಚಿತ್ ಆದರೂ ಸಮಾಜದ ಋಣ ತೀರಿಸಬಹುದು(ಭ್ರಮೆ) ಎಂಬುದಕ್ಕೆ. ಮುಖ್ಯವಾಗಿ ದಮನಿಸಲ್ಪಟ್ಟ ಎಲ್ಲದಕ್ಕೂsss ದನಿಯಾಗುವ ಹಂಬಲಕ್ಕೆ ಬರೆಯುತ್ತೇನೆ. ಕವಿತೆ ಹುಟ್ಟುವ ಕ್ಷಣ ಯಾವುದು?  ಇಂಥಹದ್ದೆ  ಕ್ಷಣ ಎನ್ನಲಾಗದು. ಒಮ್ಮೊಮ್ಮೆ ಪಾತ್ರೆ ತಿಕ್ಕುವಾಗಲೂ ಹೊಳಹುಗಾಣುತ್ತದೆ. ನಿಮ್ಮ ಕವಿತೆಗಳಲ್ಲಿ ‌ಪದೇ ಪದೇ ಕಾಡುವ ವಿಷಯ ಯಾವುದು? ಕವಿತೆಗಳ ವಸ್ತು ಯಾವುದು? ಬದುಕಿನ ಎಲ್ಲ ಮೂರ್ತ ಮತ್ತು ಅಮೂರ್ತಗಳು. ಸ್ವಲ್ಪ ಹೆಚ್ಚು ಅನ್ನುವಂತಿರುವುದು ಸ್ತ್ರೀ ಸಂವೇದನೆಗಳ ಅಭಿವ್ಯಕ್ತಿ. ಗೊತ್ತಿದ್ದೂ ಏನೂ ಮಾಡಲಾಗದ ಅಸಹಾಯಕತೆ, ನೋವಿಗೆ ತುತ್ತಾದ ಜೀವಗಳ ಕಣ್ಣೋಟ ತುಂಬ ಕಾಡುತ್ತವೆ. ಕವಿತೆಗಳಲ್ಲಿ ಬಾಲ್ಯ,ಹರೆಯ ಇಣುಕಿದೆಯಾ? ಇಣುಕಿದೆ. ಬಾಲ್ಯ ಮತ್ತು ಹರೆಯದ ಪ್ರಭಾವವೇ ಅಂತಹದ್ದು. ಪ್ರಸ್ತುತ ರಾಜಕೀಯ ಸನ್ನಿವೇಶಕ್ಕೆ ಕವಿಯಾಗಿ ಹೇಗೆ ಪ್ರತಿಕ್ರಿಯಿಸುವಿರಿ? ಸ್ವಾರ್ಥ, ದುರಾಸೆ ಮತ್ತು ನಿರ್ಲಜ್ಯ ರಾಜಕಾರಣವಿಂದು ವಿಜ್ರಂಭಿಸುತ್ತಿದೆ. ಪ್ರಜಾಪ್ರಭುತ್ವದಲ್ಲಿ ವ್ಯಕ್ತಿ ಪೂಜೆ ಯಾವತ್ತಿಗೂ ಅಪಾಯಕಾರಿಯೇ. ಇದರಿಂದ ದೋಷಗಳು ಕಾಣಿಸದೇ ಹೋಗುತ್ತವೆ. ರಾಷ್ಟ್ರದ ಬೆಳವಣಿಗೆಗಾಗಿ ಮೌಲ್ಯಯುತ ದೂರಾಲೋಚನೆಗಳಿರುವ ಯೋಜನೆಗಳು ಮತ್ತು ಪ್ರಾಮಾಣಿಕ ಪ್ರಯತ್ನದ ಕೊರತೆ ಕಾಣುತ್ತಿದೆ. ಬರಿ ಕಲ್ಯಾಣ ಯೋಜನೆಗಳಿಂದ ಬಲಿಷ್ಠ ರಾಷ್ಟ್ರ ಕಟ್ಟಲಾಗದು. ಪ್ರಸ್ತುತ ರಾಜಕೀಯ ವ್ಯವಸ್ಥೆಯೆ ಅಪಮೌಲ್ಯಗೊಂಡಿದೆ. ದೇವರು ಧರ್ಮದ ಬಗ್ಗೆ ನಿಮ್ಮ ನಿಲುವೇನು?  ಶರಣ ಧರ್ಮ ನನ್ನದು. ಜಾತಿಯಲ್ಲಿ ನಂಬಿಕೆಯಿಲ್ಲ. ಮೂರ್ತ ಕಲ್ಪನೆಗಳಲ್ಲ ನನ್ನ ದೇವರು. ಮಾನವೀಯತೆಯ ಸಾಕಾರವನ್ನು ದೇವರೆನ್ನಬಹುದೇನೊ. ಪ್ರಸ್ತುತ ಸಾಂಸ್ಕೃತಿಕ ವಾತಾವರಣ ಹೇಗಿದೆ? ಪ್ರಸ್ತುತ ಸಾಂಸ್ಕೃತಿಕ ವಾತಾವರಣ ಪರವಾಗಿಲ್ಲ ಅನಿಸುವಂತಿದೆ ಅಷ್ಟೆ. ತಾರತಮ್ಯದ ಕಸ ತೆಗೆಯಬೇಕಿದೆ. ಸಾಂಸ್ಕೃತಿಕ ಶ್ರೀಮಂತಿಕೆ ಕರಗಿದೆ. ಸಾಹಿತ್ಯದ ರಾಜಕೀಯದ ಬಗ್ಗೆ ನಿಮಗೆ ಏನನಿಸುತ್ತದೆ? ರಾಜಕಾರಣದಲ್ಲಿ ಸಾಹಿತ್ಯ ಇರಬೇಕೆ ವಿನಾ ಸಾಹಿತ್ಯದಲ್ಲಿ ರಾಜಕಾರಣವಿರಬಾರದು. ಸಾಹಿತಿ ಮಾತ್ರ ಮುನ್ನೆಲೆಗೆ ಬರುತ್ತಾನೆ. ಸಾಹಿತ್ಯ ದಿವಾಳಿಯಾಗುತ್ತದೆ. ಇಂದು ಸಾಹಿತ್ಯ ವಲಯದ ರಾಜಕಾರಣದ ಕುರಿತು ವಿಷಾದವಿದೆ. ದೇಶದ ಚಲನೆಯ ಬಗ್ಗೆ ನಿಮಗೇ‌ನನಿಸುತ್ತಿದೆ?   ನಿಜಕ್ಕೂ ದೇಶದ ಚಲನೆ ಹಿಮ್ಮುಖವಾಗಿದೆ ಎನಿಸುತ್ತಿದೆ. ಬಂಡವಾಳಶಾಹಿ ಗಹಗಹಿಸುತ್ತಿದೆ. ಅಸಹಿಷ್ಣುತೆ ಎಲ್ಲ ವಲಯಗಳಲ್ಲಿ ಹೆಚ್ಚಾಗಿದೆ. ಇಂಥ ಮನಸ್ಥಿತಿ ದೇಶಕ್ಕೆ ಮಾರಕ. ಸಾಮಾನ್ಯರ ಬದುಕು ಅಸಹನೀಯವಾಗಿದೆ. ವ್ಯವಸ್ಥೆ ಹದಗೆಟ್ಟಿದೆ.ಅಶನ ವಸನಕ್ಕೂ ಪರದಾಡುವಂತಾಗಿದೆ. ಸಾಹಿತ್ಯದ ಬಗ್ಗೆ ನಿಮ್ಮ ಕನಸುಗಳೇನು?  ಮನಸ್ಸುಗಳನ್ನು ಕಟ್ಟುವ ಕೃತಿ ರಚಿಸಬೇಕು ಎಂಬ ಕನಸಿದೆ. ಕನ್ನಡ ಇಂಗ್ಲಿಷ್ ಭಾಷೆಯಲ್ಲಿ ನಿಮ್ಮ ಇಷ್ಟದ ಕವಿಗಳಾರು?  ಕನ್ನಡದಲ್ಲಿ  ಕವಿಯಾಗಿ ಜಿ ಎಸ್ ಎಸ್, ನಿಸಾರ್ ಅಹಮ್ಮದ ಅವರು ಇಷ್ಟ. ಸಾಹಿತಿಯಾಗಿ ಶಿವರಾಮ ಕಾರಂತ, ಪೂರ್ಣಚಂದ್ರ ತೇಜಸ್ವಿ, ತ್ರಿವೇಣಿ, ಕೊಡಗಿನ ಗೌರಮ್ಮ ಇಷ್ಟ. ಶರ್ಲಾಕ್ ಹೋಮ್, ಟಾಲ್ಸ್ಟಾಯ್,  ಕೀಟ್ಸ್ ಇಷ್ಟ. ರವೀಂದ್ರನಾಥ ಟ್ಯಾಗೋರ, ಗಾಲಿಬ್, ರೂಮಿ, ಕಮಲಾದಾಸ ಅವರ ಸಾಹಿತ್ಯ ಹೆಚ್ಚು ಆಕರ್ಷಿಸುತ್ತದೆ. ನೀವು ಓದಿದ ಪುಸ್ತಕಗಳಾವವು? ಅಮೇರಿಕಾದ ಕಪ್ಪುಗುಲಾಮ ಫ್ರೆಡೆರಿಕ್ ಡಗ್ಲಾಸ್ ನ ಆತ್ಮಕಥೆ ಕಪ್ಪುಕುಲುಮೆ, ಅಮೃತ ನೆನಪುಗಳು ಮತ್ತು ಸಿಂಗಾರೆವ್ವ ಮತ್ತು ಅರಮನೆ ಇನ್ನೊಮ್ಮೆ ಓದಿದೆ. ನಿಮಗೆ ಇಷ್ಟದ ಕೆಲಸ ಯಾವುದು?  ಕಲಿಸುವುದು ಮತ್ತು ಕೃಷಿಯಲ್ಲಿ ತೊಡಗುವುದು. ನಿಮ್ಮ ಇಷ್ಟದ ಸ್ಥಳಯಾವುದು ?   ಸಮುದ್ರ ಮತ್ತು ಹೊಲದಲ್ಲಿರುವ ಪುಟ್ಟಮನೆ. ನಿಮ್ಮ ಇಷ್ಟದ ಸಿಮಿಮಾ ಯಾವುದು?  ಬೆಟ್ಟದ ಜೀವ, ಕರಾಟೆ ಕಿಡ್ ಮರೆಯಲಾಗದ ಘಟನೆಯಾವುದು ? ಅವ್ವ ಮತ್ತು ಪತಿಯ ಸಾವು. ************************************************************************ ಹರಪನಹಳ್ಳಿ ಹುಟ್ಟೂರು. ಹರಪನಹಳ್ಳಿ ತಾಲೂಕಿನ ಮೈದೂರು-ಚಿಗಟೇರಿ ಬೆಳೆದ ಊರು. ಪಿಯು ಓದಿದ್ದು ಕೊಟ್ಟೂರಿನಲ್ಲಿ. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿ.ಎ., ಕವಿವಿಯಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ. ದಾವಣಗೆರೆ, ಸದಾಶಿವಗಡ ಮತ್ತು ಭಟ್ಕಳದಲ್ಲಿ ಕನ್ನಡ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿ, 1997 ರಿಂದ ಕಾರವಾರದಲ್ಲಿ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಜನವಾಹಿನಿ, ಜನಾಂತರಂಗ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಇವರು, ಈ ಟಿವಿ ಕನ್ನಡ ನ್ಯೂಸ್ ಚಾನೆಲ್ಲಿಗೆ ವರದಿಗಾರಿಕೆ ಬಳಿಕ ಈಗ ಉದಯವಾಣಿ , ಬೆಳಗಾವಿಯ ಲೋಕದರ್ಶನ ಪತ್ರಿಕೆಗೆ ವರದಿಗಾರರಾಗಿದ್ದಾರೆ. 2009ರಲ್ಲಿ ‘ಕಡಲದಂಡೆಗೆ ಬಂದ ಬಯಲು’ ಎಂಬ ಕಥಾ ಸಂಕಲನ, 2013ರಲ್ಲಿ ‘ಬಿಸಿಲ ಬಯಲ ಕಡಲು’ ಎಂಬ ಕವಿತಾ ಸಂಕಲನ ಪ್ರಕಟಣೆ.2019 ರಲ್ಲಿ ‘ವಿರಹಿದಂಡೆ’ ಕವಿತಾ ಸಂಕಲನ ಪ್ರಕಟಿಸಿದ್ದಾರೆ. ಕಾರವಾರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.‌

Read Post »

ಕಾವ್ಯಯಾನ

ಕವಿತೆ ಜಗ… ಸೋಜಿಗ ವಿದ್ಯಾಶ್ರೀ ಅಡೂರ್ ಯಾರು ಇಲ್ಲ ಎಂಬ ಭಾವಬಿಟ್ಟುಬಿಡಿರಿ ಎಲ್ಲ ಬೇಗದೇವನೊಬ್ಬ ಸಲಹುತಿಹನುಹೆಜ್ಜೆ ಹೆಜ್ಜೆಗೇ ಗೋಡೆ ಸಂಧಿಲಿರುವ ಜೇಡಮರಳಿ ಕಟ್ಟಿ ತನ್ನ ಗೂಡಗೊಡವೆಯಿರದೆ ಬದುಕುತಿಹುದುಹೊಟ್ಟೆಪಾಡಿಗೇ ಮೊಟ್ಟೆಯಿಟ್ಟು ಮಾಯವಾಗೋಅಟ್ಟಿಉಣುವ ಜೀವಗಳಿಗೆಹುಟ್ಟುಸಾವು ಮೂಲವರುಹೋಶಕ್ತಿಯಾವುದು ಬಾಯಿಬರದೆ ಇರುವ ಮೂಕಹಸುವು ಕೂಡ ತನ್ನ ಪ್ರಸವಹಲ್ಲುಕಚ್ಚಿ ಸಹಿಸಿ ಕರುಳಬಳ್ಳಿ ಹರಿವುದೂ ಎಷ್ಟು ಕಡಿದರೂನು ಚಿಗುರಿಮತ್ತೆ ಮತ್ತೆ ಟಿಸಿಲು ಒಡೆದುಬದುಕೋ ಭರವಸೆಯ ಗಿಡಕೆಯಾರು ಕೊಟ್ಟರೂ ಇಟ್ಟಜಾಗದಲ್ಲಿ ತನ್ನಬೇರನಿಳಿಸಿ ಗಟ್ಟಿಗೊಳುವಪುಟ್ಟಬೀಜಕಿಹರೆ ಸಾಟಿಯಾರು ದಿಟ್ಟರೂ ಅಕ್ಕಿಬೆಂದು ಅನ್ನವಾಗಿನಿನ್ನೆದಿಂದು ಹಳಸಿಹೋಗಿಭವದಬದುಕು ಇಷ್ಟೇ ಎಂದುಸಾರುತಿರುವುದು ಅರಿವ ಸೊಡರು ಹಚ್ಚಿ ಒಳಗೆಹೊರಗೆ ಮಿಣುಕು ಬೆಳಕು ಬೀರೆಸುತ್ತ ಕವಿದ ಕತ್ತಲೆಲ್ಲಇಂಗಿ ಪೋಪುದು. ************

Read Post »

ಕಾವ್ಯಯಾನ

ಕವಿತೆ ನತಭಾವ ಶಾಲಿನಿ ಆರ್ ಒಡಲಾಳದಲಿ ಒಡಮೂಡಿದತಪ್ತತೆಯ ಪ್ರಶ್ನೆಗಳ ಸುರಿಮಳೆ/ಉತ್ತರ ಹುಡುಕುವಿಕೆ ಬೈಗು ಜಾವದ ಸರಹದ್ದಿನ ಅಂಚಿನಲಿ ಈ ಇಳೆ// ಕಳಚುವ ಹುನ್ನಾರು ಒದೊಂದೆ ಭಾವಗಳು ಬೆತ್ತಲಾಗಿ ಬಯಲಿಗೆ/ಸೊಬಗಿನ ಪಾತರಗಿತ್ತಿ ನೋವಿನ   ಹುಳುವಾಗಿ  ಮತ್ತೆ ಗೂಡಿಗೆ// ಉಕ್ಕಿದ ಕಡಲಾಳದಿ ನೂರು ಭಾವಗಳಸಮಾಧಿ ಪಳೆಯುಳಿಕೆಯಂತೆ/ಬಿಚ್ಚಿಡುವ ತವಕದಲಿ ಕಾಲ ಸರಿದಿದೆ ದಡಕಪ್ಪಳಿಸದ ಅಲೆಯಂತೆ// ಮಂಜಿನ ಮುಸುಕಿನ ಚಳಿಯ ಕುರ್ಳಿಗಾಳಿ ಸುಳಿದು ಬಳಿಗೆ/ತುಂಬಿದ ಎನ್ನೆದೆಗೆ ಮೋಹದ ಮುತ್ತನೊತ್ತಿದೆ ಒಲವ ಸುಳಿಗೆ// ಜನುಮವಿದು ಬರಿದಾಗಬೇಕುಮತ್ತೆ ಮತ್ತೆ ಚಿಗುರ ಹಡೆಯಲು/ಒಳಬೇಗುದಿಗಳ ಬಿಕ್ಕು ನಿಲ್ಲಬೇಕುಮತ್ತೆ ಮತ್ತೆ ನಿನ್ನ ಪಡೆಯಲು// ಸೂತ್ರವಿದು ಬಾಳ ಭವಣೆಗೆ ನೀತಿ ಮಂತ್ರದ ಪಾಠ/ಬಿದ್ದ ಎಲೆಯಲು ಸಾವಿರಾರು ಕನಸಿದೆಮತ್ತೆ ಅನುಭವದ ರಸದೂಟ// ಶರದೃತುವಿನ ಮಾಧುರ್ಯವಿದೆ ನತಭಾವ ಆದಿಯಲಿ/ಒದೊಂದೆ ಎಲೆಗಳು ಕಳಚಿ ಬೀಳುವವಿಸ್ಮಯದ ಬಾಳ ಪಯಣದಲಿ// *************************

Read Post »

ಪುಸ್ತಕ ಸಂಗಾತಿ

ಪುಸ್ತಕ ಪರಿಚಯ ಗಾಯದ ಹೂವುಗಳು  “ಗಾಯದ ಹೂವುಗಳು ”  2015 ರ  ಕಡೆಂಗೋಡ್ಲು ಶಂಕರಭಟ್ಟ ಕಾವ್ಯ ಪ್ರಶಸ್ತಿ” ಪಡೆದ ಕೊಡಗಿನ ಯುವಕವಿ  ಕಾಜೂರು ಸತೀಶ್ ರವರ ಮೊದಲ ಸಂಕಲನ ಎಂಬುದು ನಮ್ಮಲ್ಲರಿಗೂ ಹೆಮ್ಮೆಯ ವಿಷಯ.  ಫಲ್ಗುಣಿ ಪ್ರಕಾಶನದಲ್ಲಿ ಪ್ರಕಟಣೆಗೊಂಡು ಖ್ಯಾತ ಕವಿಗಳಾದ ಶ್ರೀ ವಾಸುದೇವ ನಾಡಿಗ್  ರವರ ಮುನ್ನುಡಿ ಬರೆಸಿಕೊಂಡು ಶ್ರೀ ಪ್ರವೀಣ ಕುಮಾರ ದೈವಜ್ಞಾಚಾರ್ಯ ರವರ ಭರವಸೆಯ ಬೆನ್ನುಡಿ ಲೇಪಿಸಿಕೊಂಡಿರುವ ಕವನ ಹೊತ್ತಿಗೆ.                                           ಕವಿತೆಯೆಂದರೇನೆಂದೇ                                                               ತಿಳಿಯದ,                           ನನ್ನನ್ನೇ ಉಸಿರಾಡಿಕೂಳ್ಳುತ್ತಿರುವ                                                    ಅಪ್ಪ -ಅಮ್ಮನಿಗೆ.                 ಎಂಬ ಕವಿಯ ಅರ್ಪಣಾಭಾವದಿಂದ ಅರ್ಪಿಸಿಕೊಳ್ಳುತ್ತ ಹೋಗುತ್ತದೆ.  “ಒಂದು ದಿನ ನನ್ನೊಳಗಿನ ಬೇಗುದಿಗಳಿಗೆ ಬೇರುಹುಟ್ಟಿ ಕಾಲ್ಬೆರಳ ತುದಿಯಿಂದ ನೆತ್ತಿಗೆ ಹಬ್ಬಿಕೊಳ್ಳತೊಡಗಿದಾಗ, ಕವಿತೆಯ ತೆಕ್ಕೆಯೊಳಗೆ ಬಿದ್ದೆ “ಎಂದು  ಮುನ್ನುಡಿ ಬರೆದು ಕೊಳ್ಳುವ ಕವಿ, ಕವಿತೆಗಳನ್ನು ಹೆರುವ ಪರಿಯೇ ವಿಭಿನ್ನ.   ಇರುವೆ, ಒಂಟಿ, ಊದುಕೊಳವೆ, ಖಾಲಿಡಬ್ಬ, ಚಪ್ಪಲಿಗಳು, ಮಾತು, ಮೌನ ಮತ್ತು ಕವಿತೆ, ಮರಣದ ಹಾಡು, ಹಾವು, ಮೈಲಿಗೆ, ಬೀದಿಯ ಕವಿತೆ, ಕಿಟಕಿ ತೆರೆದು ಕುಳಿತೆ, ಈ ಕವಿತೆಗಳೊಂದಿಗೆ ಯುದ್ಧ ಘೋಷಿಸಿದ್ದೇನೆ, ನೆಲವಿಲ್ಲದವನ ಉಯಿಲು, ಬೇಲಿ, ನದಿ, ಕಾಡು ಕವಿತೆ, ಮಿಕ್ಕವರಾರನ್ನೂ ಹೀರಕೂಡದು, ಒಂದು ಅರ್ಜಿ ಮತ್ತು ಹದಿನಾಲ್ಕು ತಿಂಗಳು, ನೀನು ಕೊಲೆಯಾದ ಮೇಲೆ ನಿನ್ನ ಅಂಗಿ ಧರಿಸಿ ಬರೆದದ್ದು, ಕಡಲಾಚೆಯ ಹುಡುಗಿಗೆ, ಈ ರಾತ್ರಿಗಳಲ್ಲಿ ನಿದ್ರಿಸಲಾರೆ, ನಾವಿಬ್ಬರು ತೀರಿಕೊಂಡ ಮೇಲೆ,ಒಲೆ ಮತ್ತು ಅವ್ವ, ಅರ್ಥವಾಗಿರಬಹುದು, ನೀನು ನನ್ನ  ಜೊತೆ ಬದುಕಿಕೊಳ್ಳಬಹುದು, ಬೋನ್ಸಾಯ್ ಸ್ವಗತ, ಭಿಕ್ಷುಕ ಕವಿಯ ಕವಿತೆಗಳಲ್ಲದ ಸಾಲುಗಳು, ಅಸ್ವಸ್ಥ ಕವಿತೆಗಳು, ನೋಟೀಸು, ಸಲಾಮು, ನನ್ನ ಕವಿತೆ, ಬಲಿ, ಆಕಾಶ ಧುಮ್ಮಿಕ್ಕುತ್ತಿದೆ ನೀರಾಗಿ, ಇರಲಿ, ಅಪ್ಪ ಮತ್ತವನ ಹತ್ಯಾರಗಳು, ಎಲ್ಲ ಅಮಾವಾಸ್ಯೆಗಳಲ್ಲೂ ಪದ್ಯವೊಂದಿರಲಿ ಬೆಳಕಿಗೆ, ಸಾವು, ಗಾಯದ ಹೂವುಗಳು, ಆಲ್ಬಮ್, ಯಾರದಿದು? ಇನ್ನೂ ಬದುಕಿರುವ ಕವಿತೆಗಳು, ಮೊದಲ ರಾತ್ರಿಯಂದು, ನನ್ನ ಮಿತ್ರರೆಲ್ಲಾ ಹಾಯಾಗಿದ್ದಾರೆ, ನಿನಗೆ, ಕೊಳದ ಬಳಿಯ ಮರ, ಹಸಿಮೀನು ಮತ್ತು ನನ್ನ ಕವಿತೆ, ಎಡ ಮತ್ತು ಬಲ, ಮಧ್ಯರಾತ್ರಿಯ ನಂತರದ ಮಳೆ, ಶಬ್ದ ಸಮರ, ಮರ, ಕಸದ ತೊಟ್ಟಿಯ ಕಾಗದದ ಲೋಟಗಳು, ಪರೀಕ್ಷೆ, ಉಯಿಲು.  ಈ ಮೇಲಿನ 53 ಹೂವುಗಳಿರುವ ಹೂಗುಚ್ಛ “ಗಾಯದಹೂವುಗಳು”.ಪ್ರತಿಯೊಂದು ಹೂವುಗಳೂ ಗಾಯದ ಹೂವುಗಳಾಗಿ ಅರಳಿ, ಸುತ್ತೆಲ್ಲಾ ಪರಿಮಳ ಸೂಸುತ್ತಾ ಎಲ್ಲರನ್ನು ಆಕರ್ಷಿಸಿ ಘಮಘಮಿಸುತ್ತಿರುವ ಪ್ರೀತಿಯ ಪಾರಿಜಾತಗಳಾಗಿವೆ. ಕೇಳಿಸಿಕೊಳ್ಳಿ  ಒಂದು ಇರುವೆ ಸತ್ತಿದೆ  ನನ್ನ ಕಾಲ ಬುಡದಲ್ಲಿ        ಎನ್ನುವ ಕವಿಯು ಸಮಾಜದ ವ್ಯವಸ್ಥೆ, ಶ್ರೀಮಂತವರ್ಗ,ಹತಾಶೆಗಳನ್ನು ಕಡಿಮೆ ಪದಗಳಲ್ಲಿ ಅತಿಸೂಕ್ಷ್ಮವಾಗಿ ಶಬ್ಧ ಸಂವೇದನೆಯಿಂದ  ಪ್ರಸವಿಸಿದ್ದಾರೆ.   ಸತೀಶ್  ರವರ ಕವಿತಗಳನ್ನು ಓದುತ್ತಾ ಹೋದರೆ ಅವು ಬರಿ ಕವಿತೆಗಳಾಗಿ ಅಭಿವ್ಯಕ್ತವಾಗುವುದಿಲ್ಲ. ಅವುಗಳು ಅವರು ಬದುಕಿಕೊಳ್ಳಲು ಹಡೆದ ಮಕ್ಕಳಾಗಿವೆ. ಕವಿಗೆ ಕವಿತೆಗಳೇ ಬದುಕಿನ ಭರವಸೆಯ ಮೌಲ್ಯಗಳು.  ಚಪ್ಪಲಿಗಳು ನಾವು ಎಂದೆಂದೂ ಬಹಿಷ್ಕ್ರತರು  ಮಸೀದಿ ಮಂದಿರ ಇಗರ್ಚಿಗಳಿಗೂ ಅಸ್ಪೃಶ್ಯರು  ಇತಿಹಾಸದ ಚರ್ಮ ಸುಲಿದು ಒಣಗಿಸಿ ನಮ್ಮ ಸೃಷ್ಟಿ      ಈ ಕವಿತೆಯಲ್ಲಿ ಮೌಢ್ಯ, ಜಾತೀಯತೆ, ಮೇಲು -ಕೀಳು ಮನೋಧೋರಣೆ, ಅಸಹಾಯಕತೆ, ಬಡತನ, ಅಸ್ಪೃಶ್ಯತೆ, ಸಮಾಜದ ವ್ಯವಸ್ಥೆಯ ಬಗ್ಗೆ ಇರುವ ಅತೃಪ್ತಿಯನ್ನು ಚಪ್ಪಲಿಗಳು ಕವಿತೆಯ ಮೂಲಕ ಧನ್ಯತಾ ಭಾವದಲ್ಲಿ ಕವಿತೆಯಾಗಿ ಹಡೆದಿದ್ದಾರೆ.  ಕಡಲಿನ ಆಚೆ ಬದಿಯಲ್ಲಿ  ನಿನ್ನದೊಂದು ತೊಟ್ಟು ರಕ್ತ  ಈಚೆಬದಿಯಲ್ಲಿ ನನ್ನದೊಂದು ತೊಟ್ಟು ರಕ್ತ  ಚೆಲ್ಲಿ ಬಿಡೋಣ  ಕವಿ ಕವಿತೆಗಳಲ್ಲಿ ಬಳಸಿರುವ ರೂಪಕಗಳು, ಪ್ರತಿಮೆ, ಸಾಂಕೇತಿಕ ಭಾಷೆ ಪ್ರತಿಯೊಂದು ಅವರು ಕವನ ಹೆರುವ ರೀತಿಗೆ ಉದಾಹರಣೆ.  ಹಸಿದ ಜಿಗಣೆಯೇ  ಬಾ ಹೀರು ನನ್ನನ್ನು  ಸ್ವಲ್ಪದರಲ್ಲೇ ನೀನು  ದ್ರಾಕ್ಷಿಯಾಗಿ ಉದುರುತ್ತೀ    ಕವಿಯ ಜಿಗಣೆಯೊಂದಿಗೆ ನಿಜಕ್ಕೂ ಸೋಜಿಗವೆನ್ನಿಸುತ್ತದೆ.ಮಿಕ್ಕವರಾರನ್ನೂ ಹೀರಕೂಡದು ಎಂದು ಹೇಳುವ ಪರಿ, ಕವಿಗೆ ಇತರರ ಮೇಲಿರುವ ಉದಾರತೆ, ಕಾಳಜಿ, ವಿಶಾಲ ಮನೋಭಾವವನ್ನು ಗೋಚರಿಸುತ್ತದೆ. ಸತೀಶ್ ರವರ ಕವಿತೆಗಳು ಹಸಿವು, ಬಡತನ, ಸಮಾಜದ ಅವ್ಯವಸ್ಥೆ, ಮೋಸ, ವಂಚನೆ, ಭ್ರಷ್ಟಾಚಾರ, ಹತಾಶೆ, ಜಾತೀಯತೆ, ಅಸಮಾನತೆ, ಪ್ರೀತಿ -ಪ್ರೇಮ, ಪ್ರಕೃತಿಯ ಬಗ್ಗೆ ಕಾಳಜಿ, ಪ್ರಕೃತಿ ವಿನಾಶದ ಬಗ್ಗೆ ಅಸಮಾಧಾನ ಹೀಗೆ ಸುಗಂಧ ಬೀರುತ್ತಾ ಒಂದೊಂದು ಕವಿತೆಯು ಸೂಕ್ಷ್ಮ ಸಂವೇದನೆಯೊಂದಿಗೆ ಮೊಗ್ಗಾಗಿ ಜೀವನದ ಆಳವಾದ ಅನುಭವದೊಂದಿಗೆ ಅರಳುತ್ತಾ ಹೋಗಿವೆ.  ಕವಿತೆಗಳು ರೋಷದಿಂದ ತಲ್ಲಣಿಸುವಂತೆ  ಭಾಸವಾದರೂ ಆರೋಗ್ಯಯುತ ಸಮಾಜ ರೂಪುಗೊಳ್ಳಲು ಬದಲಾವಣೆಗಳಿಗಾಗಿ ಮಿಡಿಯುವ ತುಮುಲವಿಸುತ್ತದೆ ನನಗೆ. ಕವಿತೆಗಳನ್ನು ವ್ಯಾಖ್ಯಾನಿಸುವುದಕ್ಕಿಂತ  ಅವುಗಳನ್ನು ಸವಿದರೆ ಅವುಗಳಲ್ಲಿನ ಕವಿಯ ಸಾಹಿತ್ಯ ಅಭಿವ್ಯಕ್ತಿಯ ಪರಿಚಯವಾಗುತ್ತದೆ.  ಮಲೆಯಾಳಂ,ಇಂಗ್ಲೀಷ್ ಭಾಷೆಗಳ ಸಾಹಿತ್ಯದ ರುಚಿವುಂಡು ಅನುವಾದಗಳಲ್ಲಿ  ತೊಡಗಿದ್ದರೂ(ಮಲಯಾಳಂ ಅನುವಾದಿತ ಕವಿತೆಗಳ ಸಂಕಲನ” ಕಡಲ ಕರೆ”ಕುವೆಂಪು ಭಾಷಾ ಭಾರತಿ ಪ್ರಾಧಿಕಾರದಿಂದ ಪ್ರಕಟವಾಗಿದೆ) ಕನ್ನಡವನ್ನು ಹೆಚ್ಚು ಪ್ರೀತಿಸಿ ಗುರುತಿಸಿಕೊಂಡಿರುವುದು ಸತೀಶ್ ರವರ ಹೆಚ್ಚುಗಾರಿಕೆ.    ‘ದೊಡ್ಡವರ ಶಿಫಾರಸ್ಸಿಲ್ಲದೆ ಬಹುಮಾನ ದಕ್ಕುವುದಿಲ್ಲ’  ಎಂಬ ಕವಿಯ ನಿಲುವನ್ನು ಹುಸಿಯಾಗಿಸಿ ಅವರ ಕವಿತ್ವ ಜ್ಞಾನಕ್ಕೆ ಪ್ರಶಸ್ತಿಯನ್ನು ದಕ್ಕಿಸಿಕೊಂಡಿರುವುದು ನಿಜಕ್ಕೂ ಶ್ಲಾಘನೀಯ. ಹೀಗೆ ಅವರ ಸಾಹಿತ್ಯದ ತೇರು ಗಾಯದ ಹೂವುಗಳಿಂದ ಅರಳಿ ದೊಡ್ಡ ಹೆಮ್ಮರವಾಗಿ ಹಲವರಿಗೆ ಆಶ್ರಯವಾಗುವ ದೀವಿಗೆಯಾಗಲಿ ಎಂಬುದೇ ಸಾಮಾನ್ಯ ಓದುಗರಾಗಿ ನಮ್ಮೆಲರ ಹೃದಯತುಂಬಿದ ಹಾರೈಕೆ ************************************************** ಕಾವ್ಯ ಎಸ್.

Read Post »

ಕಾವ್ಯಯಾನ

ಕವಿತೆ ಧ್ಯಾನಿಸುವ ಹೃದಯ ಡಾ.ಸುಜಾತಾ.ಸಿ ದೂರ ಸರಿದು ಸತಾಯಿಸಬೇಡಾದಾರಿ ಉದ್ದಕ್ಕೂ ನಾಲ್ಕಹೆಜ್ಜೆ ಇಟ್ಟು ನೋಡು ಬೆಳದಿಂಗಳ ನಡಿಗೆಗೆ ಕಾರ್ಮೊಡ ಕಟ್ಟಬೇಡಾಹಾಲ್ದೆನೆ ಇರುಳ ಸರಿಸಿ ಸವಿದು ನೋಡು ಸುರಿದ ಮಳೆಯಲಿ ಕಣ್ಣ ಹನಿ ಹುಡುಕ ಬೇಡಾಕಣ್ಣಾವಲಿಯಲಿ ಅರಳಿದ ನಿಂತ ಮುಖ ನೋಡು ಗಾಯದ ಮೆಲೆ ಉಸಿರು ಹರಡಿಬಿಡು ಒಮ್ಮೆಎದೆಭಾರ ತಂಗಾಳಿಯಾಗಿ ಬಿಡದು ನೋಡು ಕಣ್ಣು ರೆಪ್ಪೆ ಹಾಗೇ ಕಾಪಿಟ್ಟುಕೊ ಅಲುಗಿಸಬೇಡಾಕಂಡ ಕನಸಿಗೆ ಘಾಸಿಯಾದಿತು ನೋಡು ಮನಸುಗಳ ಸೇತುವೆಯ ಏಣಿ ಏರಿ ಬಿಡು ಒಮ್ಮೆನಿನ್ಮನ್ನೇ ಧ್ಯಾನಿಸುತ ಕುಳಿತ ಹೃದಯ ಮತ್ತೆ ಸಿಕ್ಕರೆ ಸಿಗಬಹುದು ಒಮ್ಮೆ *************************

Read Post »

ಕಥಾಗುಚ್ಛ

ಕಥೆ ಋಣ ಎಂ. ಆರ್. ಅನಸೂಯ ಗಿರಿಜಮ್ಮ ತೋಟದಲ್ಲಿ ಮಾವಿನ ಫಸಲನ್ನು ನೋಡುತ್ತಾ “ಈ ಸತಿ ಮಾವಿನ ಫಸಲು ಚೆನ್ನಾಗಿ ಬಂದೈತೆ ಅಲ್ವೇನೋ ನಾಗ” “ಹೂನ್ರಮ್ಮ, ಈ ಸತಿ ಕಾಯಿ ಜಗ್ಗಿ ಹಿಡಿದೈತೆ. ಹಂಗೇನೆ ಹಲಸಿನ ಗಿಡಗಳು, ಹುಣಸೇಗಿಡ ಎಲ್ಲಾದ್ರೂಗನೂ ಚೆನ್ನಾಗಿ ಕಾಯಿ ಹಿಡಿದೈತೆ “ ತೋಟದ ಗೇಟ್ ಬಳಿ ಮೋಟರ್ ಬೈಕ್ ನ ಹಾರ್ನ್ ಸೌಂಡ್ ಕೇಳಿದ ಇಬ್ಬರೂ ಆ ಕಡೆ ನೋಡಿದರೆ ರಾಜಣ್ಣ ಕೈಯಲ್ಲಿ ಕಾಫಿ ಪ್ಲಾಸ್ಕ್ ಹಾಗೂ ಒಂದು ಸಣ್ಣ ಬ್ಯಾಗ್ ನ್ನು ಹಿಡಿದು ಬರುತ್ತಿದ್ದರು.  ” ಸಾವ್ಕಾರ್ ಕಾಫಿ ತರ್ತಾವ್ರೆ”  ಎನ್ನುತ್ತಾ ಇಬ್ಬರೂ ಅಲ್ಲೇ ಇದ್ದ ಬೇವಿನ ಮರದ ಕೆಳಗೆ ಬಂದ್ರು. ” ನಾನೇ ಮನೆಗೆ ಬರ್ತಿದ್ದೆ. ನೀವ್ಯಾಕೆ ಬಂದ್ರಿ” ಎನ್ನುತ್ತಾ ಗಿರಿಜಮ್ಮ ಮರದ ಕೆಳಗಿದ್ದ ಕಲ್ಲು ಬೆಂಚ್ ಮೇಲೆ ಕುಳಿತು ಕೊಡದ ನೀರನ್ನು ಬಗ್ಗಿಸಿ ಕೈ ತೊಳೆದುಕೊಂಡು ಕುಳಿತರು.  ಬ್ಯಾಗ್ನಲ್ಲಿದ್ದ ಕವರ್ ತೆಗೆಯುವುದನ್ನು ನೋಡಿದ ನಾಗ “ಉಮಕ್ಕ ಏನೋ ತಿಂಡಿ ಕಳಿಸೈತೆ” ಗಿರಿಜಮ್ಮ ಕಾಫಿಯನ್ನು ಕಾಫಿಯನ್ನು ಮೂರು ಪ್ಲಾಸ್ಟಿಕ್ ಲೋಟಗಳಿಗೆ ಸಮನಾಗಿ ಬಗ್ಗಿಸಿ,ನಾಗನಿಗೆ ಕಾಫಿ ಹಾಗೂ  ಕಡ್ಲೆಬೇಳೆ ವಡೆ ಕೊಟ್ಟು ಗಂಡ ಹೆಂಡತಿ ಇಬ್ಬರೂ ಕಾಫಿ ಕುಡಿಯುತ್ತಾ ವಡೆ ತಿನ್ನುತ್ತಿದ್ದರು. ನಾಗ  ಕಾಫಿ ಕುಡಿದು ವಡೆ ತಿನ್ನುತ್ತ ತನ್ನ ಕೆಲಸ ನೋಡಲು ಹೋದ. ಗಿರಿಜಮ್ಮ ” ರಾತ್ರಿ ಅಪ್ಪಯ್ಯನಿಗೆ ಫೋನ್ ಮಾಡಿ ಮುಂದಿನ ವಾರ  ಬರ್ತೀನಿ ಅಂತ ಹೇಳ್ಬೇಕು. ಅಷ್ಟೊತ್ತಿಗೆ ಮಾವಿನ ಕಾಯಿ ಹಣ್ಣಾಗ್ತವೆ. ಹಣ್ಣು ಕೊಟ್ಟು ಮಾತುಕತೆನೆಲ್ಲ ಮುಗಿಸ್ಕಂಡೆ  ಬರ್ತಿನಿ. ಇನ್ನು ಮುಂದಕ್ಕ ಹಾಕೋದು ಬೇಡ” ಎಂದರು. “ಹಂಗೆ ಮಾಡು  ಎನ್ನುತ್ತಾ ಈ ಸರ್ತಿ ತೆಂಗಿನ ಫಸಲೆಲ್ಲಾ  ಚೆನ್ನಾಗೈತೆ ” ಎಂದರು ರಾಜಣ್ಣ ತೆಂಗಿನ ಮರಗಳನ್ನು ನೋಡುತ್ತ.”ಅಮ್ಮಾವ್ರೆ, ಇವೆಲ್ಲ ಈ  ಹೊಸ ತೋಟದಗೆ ಬಿದ್ದಿರೋ ಕಾಯಿ. ನೀವು ಸಾವ್ಕಾರ ಜೊತೆಗೆ ಮನೆಗ್ ಹೋಗ್ರಿ. ನಾನು  ಹಳೇ ತೋಟದಗೆ  ಬಿದ್ದಿರೋ ಕಾಯ್ಗಳ್ನ ಆರ್ಸ್ ಕಂಡು ಮನೆ ಹತ್ರ ಬರ್ತಿನಿ” ನಾಗ ಕೂಗಿ ಹೇಳಿದ “ಹಂಗೆ ಮಾಡು ” ಎನ್ನುತ್ತಾ ಗಿರಿಜಮ್ಮಗಂಡನ ಬೈಕ್ ನ ಹತ್ತಿದರು.ನಾಗ ಹಳೇ ತೋಟ, ಹೊಸ ತೋಟ ಎಂದು ಕರೆಯಲು ಕಾರಣವಿತ್ತು. ಹಳೆತೋಟವೆಂದ್ರೆ ಗಿರಿಜಮ್ಮನ ಗಿರಿಜಮ್ಮನ ಅತ್ತೆ ಮಾಡಿದ್ದು. ಅವರಿಗಿದ್ದುದು ಎಂಟೆಕ್ರೆ ಜಮೀನು. ಅದರಲ್ಲಿ ನಾಲ್ಕೆಕರೆ ತೆಂಗಿನ ತೋಟ ಮಾಡಿ ಎರಡು ಎಕ್ರೆಯಲ್ಲಿ  ನೀರುಳ್ಳಿ ಹಾಗು ರಾಗಿ ಹಾಕುತ್ತಿದ್ದರು ಉಳಿದ  ಎರಡು ಎಕ್ರೆಯನ್ನು ಕೋರಿಗೆ ಕೊಟ್ಟಿದ್ದರು.  ಗಂಗಮ್ಮನ  ಗಂಡ ಚಂದ್ರ ಶೇಖರಯ್ಯನವರು ಕಿರಾಣಿ ಅಂಗಡಿ ಇಟ್ಟಿದ್ದರಿಂದ  ತೆಂಗಿನ ಗಿಡ ಇಟ್ಟು ಬೆಳೆಸಿದ್ದೆಲ್ಲಾ ಗಂಗಮ್ಮನೇ. ಹಾಗಾಗಿ ಅದು ಗಂಗಮ್ಮನ ತೋಟವೆ ಸರಿ ಹೊಸ ತೋಟವು  ಗಿರಿಜಮ್ಮ ಬೆಳ್ಸಿದ ತೋಟವಾಗಿತ್ತು  ಗಿರಿಜಮ್ಮನ ತಾಯಿ ಶಾರದಮ್ಮ ಶಿವಮೂರ್ತಿಯನ್ನು ಮದ್ವೆಯಾಗಿ ಗಂಡನ ಮನೆ ಸೇರಿ ಎರಡು ಹೆಣ್ಣುಮಕ್ಕಳ ತಾಯಾಗಿ ಸಂಸಾರ ಬೆಳೆದಿತ್ತು.‌  ಗಂಗಮ್ಮನಿಗೆ  ಶಾರದ,  ಪಾರ್ವತಿ, ಸುವರ್ಣ ಮೂವರು ಹೆಣ್ಣುಮಕ್ಕಳ ನಂತರ ಹುಟ್ಟಿದವನೇ  ರಾಜಶೇಖರ. ಶಾರದಮ್ಮನ ಮಗಳಾದ ಗಿರಿಜಾ ಹುಟ್ಟಿದಾಗ ತಮ್ಮ ರಾಜಶೇಖರನಿಗಿನ್ನು ಐದು ವರ್ಷ.ಗಿರಿಜಳನ್ನು ರಾಜಶೇಖರನಿಗೆ  ಕೊಟ್ಟು ಮದುವೆ  ಮಾಡುವುದು ಎಂದು ತಾಯಿ ಮಗಳ ನಡುವೆ ಅಲಿಖಿತ ಒಪ್ಪಂದವಾಗಿತ್ತು. ಶಿವಮೂರ್ತಿಯವರ  ಕಡೆಯಿಂದಲೂ  ಅನುಮೋದನೆ ದೊರಕಿತ್ತು. ಶಾರದಾಳಿಗೆ ಎರಡನೆಯ ಮಗು ಹೆಣ್ಣೇ ಆಗಿದ್ದು ಅವಳೇ  ಶಾಂಭವಿ. ಶಾರದಮ್ಮನ ಮಗಳು ಗಿರಿಜಳ ಮದುವೆ ಆಗುವ ಎರಡು ವರ್ಷಕ್ಕಿಂತ ಮುಂಚೆ ಗಂಗಮ್ಮನ ತೋಟದ ಪಕ್ಕದಲ್ಲಿ ಇದ್ದ ಜಮೀನು ಮಾರಾಟಕ್ಕಿತ್ತು. ಆಗ ಶಾರದಮ್ಮನವರ  ಒತ್ತಾಸೆಯಿಂದ ಶಿವಮೂರ್ತಿಯವರಿಗೆ ಇಷ್ಟವಿಲ್ಲದಿದ್ದರೂ ಸಹ ಅದನ್ನು ಕೊಂಡ್ಕಂಡಿದ್ದರು. ಶಾರದಳನ್ನು ಮದುವೆಯಾದ ಮೇಲೆ ತಮ್ಮ ವ್ಯವಹಾರಗಳು ಏಳ್ಗೆ ಕಂಡಿವೆ  ಎಂಬುದು ಅವರ ನಂಬಿಕೆ. ಹಾಗಾಗಿ ಹೆಂಡತಿಯ ಮಾತಿಗೆ ಇಲ್ಲವೆನ್ನಲಾಗದೆ ಒಪ್ಪಿದ್ದರು. ಶಾರದಳ ತಂದೆ ಚಂದ್ರಶೇಖರಯ್ಯನವರು ಪಾರ್ಶ್ವವಾಯು  ಪೀಡಿತರಾದ ಮೇಲೆ  ಮಗನ ಮದುವೆ ಮಾಡುವ ಹಂಬಲ ಹೆಚ್ಚಾಗಿದ್ದರಿಂದ ಗಿರಿಜಳ P U C ಮುಗಿದ ತಕ್ಷಣ  ರಾಜಶೇಖರನೊಂದಿಗೆ  ಮದ್ವೆ ನಡೆದಿತ್ತು ರಾಜಶೇಖರನಿಗೆ ಕೊಡುವುದು ಬೇಡವೆನ್ನಲು ಯಾರಿಗೂ ಕಾರಣವೇ ಇರಲಿಲ್ಲ. ರಾಜ್ಯ ಹೆದ್ದಾರಿಯಲ್ಲಿದ್ದ ಹೋಬಳಿ ಕೇಂದ್ರವಾಗಿದ್ದ ದೊಡ್ಡ ಹಳ್ಳಿಯಲ್ಲಿ ಅಂಗಡಿ ವ್ಯವಹಾರದ ಜೊತೆಗೆ ಜಮೀನು, ದೊಡ್ಡಮನೆಯ  ಏಕೈಕ ವಾರಸ್ದಾರ  ಹೆಸರಿಗೆ ತಕ್ಕಂತೆ ಲಕ್ಷಣವಾದ ಗಂಡು. ಚಿಕ್ಕಂದಿನಿಂದಲೇ ಮದುವೆ ನಿಶ್ಚಯವಾಗಿದ್ದರಿಂದ ಗಿರಿಜಳಿಗು ರಾಜಶೇಖರ  ಮಾಮನನ್ನು ಕಂಡರೆ ಇಷ್ಟ. ಶಾರದಮ್ಮನ ತಂಗಿಯರಾದ ಪಾರ್ವತಿ ಹಾಗೂ ಸುವರ್ಣರಿಗೂ ಸಹಾ ಮದುವೆಯಾಗಿ ಒಳ್ಳೆ ಮನೆಗಳನ್ನು ಸೇರಿದ್ದರು. ಮದ್ವೆಯಾದ ವರ್ಷದಲ್ಲೆ ಅನಾರೋಗ್ಯದಿಂದಾಗಿ ಚಂದ್ರಶೇಖರಯ್ಯನವರು ತೀರಿ ಕೊಂಡರು. BSc ಓದಿದ್ದ ರಾಜಶೇಖರ  ಅಂಗಡಿ ಮತ್ತು ತೋಟ ನೋಡಿಕೊಳ್ಳುತ್ತಿದ್ದ. ಜತೆಗೆ ತಾಯಿಯ ಸಹಕಾರ ಇತ್ತು. ಗಿರಿಜಾಳಿಗೆ ಗಂಡು ಮಗುವಾದ್ದರಿಂದ ಮಗುವಿಗೆ ಚಂದ್ರ ಶೇಖರ ಎಂದು ತಾತನ ಹೆಸರನ್ನಿಟ್ಟರು.  ಗಿರಿಜಳ ತಂದೆ ಶಿವಮೂರ್ತಿಯವರ  ವ್ಯವಹಾರ  ದೊಡ್ಡದಾಗಿದ್ದು ಬಿಡುವಿಲ್ಲದ  ದುಡಿಮೆ  ಅವರದಾಗಿತ್ತು. ರಾಜಶೇಖರನ  ಸಲಹೆಯಂತೆ ಗಿರಿಜಾ ಒಮ್ಮೆ ತವರಿಗೆ ಬಂದಾಗ ತಮ್ಮ ತೋಟದ ಪಕ್ಕದಲ್ಲಿರುವ ಜಮೀನನ್ನು ತಾವೇ ಕೊಂಡು ಕೊಳ್ಳುತ್ತೇವೆ ಎಂದು ಅಪ್ಪ ಅಮ್ಮನ ಬಳಿ ಹೇಳಿದಳು ಅಲ್ಲಿಗೆ ಬಂದು ನಾವು ಅ ಜಮೀನನ್ನು ನೋಡಲಾಗದು ನೀವೇ ಮಾಡ್ಕಂಡು ಹೋಗ್ರಿ. ಮುಂದೆ ನಿನಗೆ ಕೊಡುವ ಉದ್ದೇಶವಿಟ್ಟುಕೊಂಡೆ ನಾವು ಅದನ್ನು ಕೊಂಡ್ಕಂಡಿದ್ದು ಆದು ಎಂದೆಂದಿದ್ದರೂ ನಿನ್ನದೆ. ನೀನೇನು ನಮಗೆ ಹಣ ಕೊಡಬೇಕಿಲ್ಲ ಎಂದು ಇಬ್ಬರೂ ತಮ್ಮ ಕೊನೆ ತೀರ್ಮಾನ  ಕೊಟ್ಟಿದ್ದರು. ಮಗುವಿಗೆ  ವರ್ಷ ತುಂಬುವ ವೇಳೆ ಒಂದು ಮಧ್ಯಾಹ್ನ ಗಿರಿಜಾ ಮಗುವಿನೊಂದಿಗೆ ಮಲಗಿದ್ದಾಗ ಅಜ್ಜಿ ಗಂಗಮ್ಮ ಅಯ್ಯೋ ಶಾರದ ಎಂದು ಜೋರಾಗಿ ಕೂಗಿದ ಶಬ್ದ ಕೇಳಿ ಬೆಚ್ಚಿಬಿದ್ದಳು. ತಕ್ಷಣ ಎದ್ದು ಬಂದು ನೋಡಲು  ಆ ಕೂಗನ್ನು ಕೇಳಿ ಗಾಬರಿಯಾಗಿ ಅಂಗಡಿಯಲ್ಲಿದ್ದ ರಾಜ ಶೇಖರನೂ ಒಳಗೆ ಬಂದ. ತಕ್ಷಣ ಪೋನ್ ಕೈಗೆತ್ತಿಕೊಂಡು ಮಾತನಾಡಿದ ಮೇಲೆ ಗಿರಿಜಳ ಬಳಿ ಬಂದು ಅಕ್ಕನಿಗೆ ಹಾರ್ಟ್ಅಟ್ಯಾಕ್ ಆಗಿ ಹೋಗಿಬಿಟ್ಟಳು ಎಂದು ಹೇಳಿದ ಅದನ್ನು ಕೇಳಿದ ಗಿರಿಜಳಿಗೆ ಶಾಕ್.ರಾತ್ರಿ ಮಾತನಾಡಿದ  ಅಮ್ಮ ಈಗಿಲ್ಲ ! ಅಮ್ಮ ಹೋದ ದು:ಖದೊಡನೆ ತಂಗಿ ಶಾಂಭವಿಯ ಮುಂದಿನ ದಿನಗಳನ್ನು ನೆನೆದರೆ ವ್ಯಥೆ ಹೆಚ್ಚಾಗುತ್ತಿತ್ತು. ಶಾಂತವಾದ ಕಲ್ಯಾಣಿಗೆ ಕಲ್ಲೆಸೆದಂತಹ ಪರಿಸ್ಥಿತಿ ಆ ಸಂಸಾರದ್ದು. ತಾಯಿಯ ಸಾವಿಗೆಂದು ಬಂದ ಗಿರಿಜಾ ಹೆಚ್ಚು ಕಡಿಮೆ ಐದು ತಿಂಗಳು ತಂಗಿಯೊಂದಿಗೆ ತವರು ಮನೆಯಲ್ಲೇ ಇದ್ದುಬಿಟ್ಟಳು. ಶಾಂಭವಿಯಂತೂ ಪೂರ್ತಿಯಾಗಿ ಕುಗ್ಗಿಬಿಟ್ಟಳು. ಅಪ್ಪನಿಗೆ ದು:ಖವಿದ್ದರೂ ತೋರ್ಪಡಿಸದೆ ಶಾಂಭವಿಯನ್ನು ಸಂತೈಸುತ್ತಿದ್ದರು. ಆಗ ಶಾಂಭವಿ  SSLC  ಓದುತ್ತಿದ್ದಳು. ಗಂಗಮ್ಮ ಬಂದ್ರೂನೂ ಒಂದು ದಿನ ಇದ್ದರೆ ಹೆಚ್ಚು. ಮಗಳಿಲ್ಲದ ಮನೆಯಲ್ಲಿರಲು ಮನಸ್ಸಿಗೇ ಕಷ್ಟವಾಗುತ್ತಿತ್ತು.ಗಿರಿಜಳಿಗೆ ನೀನು ಬೇಕಾದರೆ ಇನ್ನೂ ಇರು. ನಾನು ಮನೆ ಕಡೆ ನೋಡ್ಕಂತಿನಿ. ನಿನಗಿದು ತವರು ಮನೆ. ನನಗಿದು ಮಗಳ ಮನೆ ಎಂದು ಬಿಟ್ಟಿದ್ದರು  ಈ ನಡುವೆ ಶಿವಮೂರ್ತಿಯ  ಅಕ್ಕ ಗೌರಮ್ಮತಮ್ಮನಿಗೆ ಮರು ಮದ್ವೆ ಆಗಲು ಸಲಹೆ ಕೊಟ್ಟಿದ್ದರು.  ಶಾಂಭವಿಗೆ ಕಷ್ಟವಾಗುತ್ತದೆ ಎಂದು ಅಡುಗೆ ಮಾಡಲು ತಮ್ಮ ಕಡೆಯ  ಹೆಂಗಸನ್ನು ಕರೆ ತಂದುಬಿಟ್ಟಿದ್ದರು.”ಶಾಂಭವಿಗು ಮದುವೆ ಆದ ಮೇಲೆ ನಿನ್ನನ್ನು ಯಾರು ನೋಡ್ಕಂತರೆ. ನಾವೆಲ್ಲಾ  ಎಷ್ಟು ದಿನ ಇರೋಕಾಗುತ್ತೆ. ಮನೆಯಲ್ಲಿ ಶಾಂಭವಿನೂ ಒಬ್ಬಳೆ” ಎಂದು ಹೇಳುತ್ತಲೇ ಇದ್ದರು. ಆಗ ಶಿವಮೂರ್ತಿ  ಏನನ್ನು ಹೇಳದೆ ಮೌನಕ್ಕೆ ಶರಣಾಗುತ್ತಿದ್ದರು. ಗಂಗಮ್ಮ  ಮತ್ತು ರಾಜಶೇಖರ ಇಬ್ಬರೂ ಸೇರಿ  ಗಿರಿಜಳಿಗೆ  ” ನೀನು ಮನೆಗೆ ಬಂದು ಬಿಡು. ಆಗ ಮನೆ ಕಡೆ ನೋಡಿಕೊಳ್ಳಲು  ಕಷ್ಟವಾದಾಗ ವಿಧಿಯಿಲ್ಲದೆ  ಮದುವೆಗೆ ಒಪ್ಕಳ್ಳುತ್ತಾರೆ” ಎಂದು ಹೇಳಿದರು. ಆಗ ಗಿರಿಜಾ “ಶಾಂಭವಿ ನಾನಿನ್ನು ಊರಿಗೆ ಹೊರಡುತ್ತೇನೆ” ಎಂದೊಡನೆ ಅಕ್ಕನನ್ನು ತಬ್ಬಿ ಕೊಂಡು ಅತ್ತುಬಿಟ್ಟಳು. ಅವಳೊಡನೆ ಗಿರಿಜಳೂ ಸಹಾ. ಅಂದು ಶಿವಮೂರ್ತಿ ಮನೆಗೆ  ಬಂದು ಊಟ ಮಾಡಿದ ಮೇಲೆ “ಅಪ್ಪಾ ಅಕ್ಕ ಊರಿಗೆ  ಹೋಗ್ತಳಂತೆ. ಇನ್ನು ಸ್ವಲ್ಪ ಸ್ವಲ್ಪ ದಿನ ಇರು ಅನ್ನಪ್ಪ” ಎಂದು ಅತ್ಕಂಡು ಹೇಳುತ್ತಿದ್ದರೆ ನೋಡಿದವರ ಕಣ್ಣಲ್ಲೂ ಕಣ್ಣೀರ ಧಾರೆ ಹರಿದುಬಿಡುತ್ತಿತ್ತು ಕಣ್ದುಂಬಿದ ಶಿವಮೂರ್ತಿ ಅವಳ ತಲೆ ಸವರುತ್ತ “ಇರ್ತಳೆ  ಸುಮ್ನಿರು ನಾನು ಅವಳಿಗೆ ಹೇಳ್ತಿನಿ”ಎಂದು ಸಂತೈಸಿದರು ” ಗಿರಿಜ ಇಷ್ಟೇ ದಿನ ಇದ್ದೀಯಾ ಇನ್ನು ಸ್ವಲ್ಪ ದಿನ ಇರಮ್ಮ ನಾನು ರಾಜಶೇಖರಂಗೆ ಹೇಳ್ತೀನಿ”ಎಂದಾಗ ಅಳುತ್ತಲೇ “ಅಯ್ತಪ್ಪ” ಎಂದು ಗಿರಿಜ ಹೇಳಿದ ಮೇಲೆ ಶಾಂಭವಿಯು  ಗಂಗಮ್ಮನಿಗೆ ಫೋನ್ ಮಾಡಿ ” ಅಜ್ಜಿ ಅಕ್ಕ ಇನ್ನೂ ಸ್ವಲ್ಪ ದಿನ ಇಲ್ಲೆ ಇರಲಿ” ಆ ಕಡೆಯಿಂದ ಗಂಗಮ್ಮನೂ ಅಳುತ್ತಾ “ಆಯ್ತು ಪುಟ್ಟಿ” ಎನ್ನದೆ ವಿಧಿಯಿರಲಿಲ್ಲ. ಮೊಮ್ಮಕ್ಕಳನ್ನು ಸಮಾಧಾನ ಮಾಡಲೆಂದು ಮಾರನೆಯ ದಿನವೇ ಬಂದು ಎರಡು ದಿನವಿದ್ದು ಸಮಯ ನೋಡ್ಕಂಡು ತಂದೆಯನ್ನು ಮರು ಮದುವೆಗೆ ಒಪ್ಪಿಸುವಂತೆ ಸಲಹೆ ನೀಡಿ ಹೊರಟು ಬಂದಿದ್ದರು. ಒಂದು ವಾರ ಕಳೆದ ನಂತರ ಶಿವಮೂರ್ತಿ ರಾತ್ರಿ ಊಟ ಮಾಡಿದ ಮೇಲೆ ವ್ಯವಹಾರಕ್ಕೆ ಸಂಬಂಧಿಸಿ ಫೋನ್ ಮಾಡಿ ಮಾತನಾಡುತ್ತಿದ್ದರು.ಆಗ ಅಲ್ಲಿಗೆ ಬಂದ ಗಿರಿಜಾ ಶಾಂಭವಿ ಇಬ್ಬರು ಕುಳಿತರು. ಆಗ ಶಿವಮೂರ್ತಿ “ಏನ್ರಮ್ಮ” ಎನ್ನುತ್ತಾ ಪಕ್ಕದಲ್ಲೇ ಕುಳಿತರು. ಆಗ ಗಿರಿಜಾ ” ನಾನು ಊರಿಗೆ ಹೋಗ್ಬೇಕಿತ್ತಪ್ಪ. ಬಹಳ ದಿನ ಆಯ್ತು” ಎಂದಳು.ಆಗ ಶಿವಮೂರ್ತಿ “ನಾನು ರಾಜಶೇಖರನ ಹತ್ರ ಮಾತಾಡಿದೀನಿ. ಸ್ವಲ್ಪ ದಿನ ಇರಮ್ಮ” ಎಂದಾಗ ಗಿರಿಜ “ಅಪ್ಪಾ, ಅಜ್ಜಿ  ಆತ್ತೆ ಮಾವ ಎಲ್ಲರೂ ನೀನು  ಮದುವೆ ಆಡಬೇಕು ಅಂತಾ ಹೇಳ್ತಾರೆ.  ಶಾಂಭವಿದು ಮದ್ವೆ ಆದ ಮೇಲೆ ನಿಂಗೆ ಕಷ್ಟ ಆಗುತ್ತೆ. ಯಾರೂ ಬಂದು ಇಲ್ಲಿರಕ್ಕೆ ಆಗಲ್ಲ.ಎಲ್ರಿಗೂ ಕಷ್ಟ ಶಾಂಭವಿನೂ ಒಬ್ಬಳೆ ಇದಾಳೆ “ ” ಅಲ್ಲಮ್ಮ ನಲವತ್ತೈದು ವರ್ಷ ಆಗೈತೆ ನನಗೆ ಈಗೆಂಥ  ಮದ್ವೆ” ಎಂದರು ಶಿವಮೂರ್ತಿ.” ನೀನು ಒಪ್ಕೊಳ್ಳಪ್ಪ ಅದನ್ನೆಲ್ಲಾ ಅತ್ತೆ ನೋಡ್ಕಂತರೆ” ಎಂದಳು ಗಿರಿಜ. ಆಗ ಶಿವಮೂರ್ತಿ” ನೀನೇನೋ ಗಂಡನ ಮನೆಗೆ ಹೋಗ್ತೀಯ ಶಾಂಭವಿಗೆ ಕಷ್ಟ ಆಗುತ್ತಮ್ಮ ಮುಂದೆ. ಮಲತಾಯಿನ ತಂದು ಬಿಟ್ಟ  ಅಂತ ಆ ಹುಡುಗಿ ನೊಂದ್ಕಬಾರದು.”  ಶಿವಮೂರ್ತಿ ಹೇಳಿದರು. ಅಲ್ಲಿಯವರೆಗೆ ಸುಮ್ಮನಿದ್ದ  ಶಾಂಭವಿ “ಅಂಗೆಲ್ಲ ಏನೂ ಆಗಲ್ಲಪ್ಪ. ನಾನು ಅಡ್ಜೆಸ್ಟ್ ಮಾಡ್ಕಂತಿನಿ”ಎಂದಳು. “ಸರಿ ಆಯ್ತು.  ನಿಮ್ಮತ್ತೆಗೂ ಅಜ್ಜಿಗೂ ನೀವೇ  ಹೇಳ್ರಿ” ಎಂದು ಮಲಗಲು ಹೋದರು. ಮಾರನೇ ದಿನವೇ ಗಿರಿಜಾ ಗೌರತ್ತೆಗೆ ಫೋನ್ ಮಾಡ್ಬಿಟ್ಟು ಕರೆಸಿಕೊಂಡಳು. ಗೌರತ್ತೆ ಒಂದು ಸಂಬಂಧವನ್ನು ಆಗ್ಲೇ ಮನದಲ್ಲೆ ಲೆಕ್ಕಾಚಾರ ಹಾಕಿಟ್ಟು ಕೊಂಡಿದ್ದರು. ಅವರಿಗೆ ಪರಿಚಯವಿದ್ದ ಬಡ ಕುಟುಂಬವೊಂದರ  ಹುಡುಗಿಯೇ ಮಹೇಶ್ವರಿ. ಗಂಡ ತೀರಿಕೊಂಡ ಮೇಲೆ ಮೂವರು ಹೆಣ್ಣು ಮಕ್ಕಳನ್ನು ಸಾಕಿ ಬೆಳೆಸಿದ  ರಾಜಮ್ಮ ಇವರಿಗೆ ಹಿಂದಿನ ಪರಿಚಯ. ಮಹೇಶ್ವರಿಯು  P U C ಮುಗಿಸಿ ಟೈಲರಿಂಗ್ ಕಲಿತು ಸಂಪಾದನೆ ಮಾಡುತ್ತಿದ್ದಳು. ಅವಳ ಇನ್ನಿಬ್ಬರು ತಂಗಿಯರು ಕೂಡಾ ಟೈಲರಿಂಗ್ ಕಲಿತಿದ್ದರು. ಮೂವರು  ವೃತ್ತಿ ಪರಿಣತಿ ಪಡೆದ ಕಾರಣ ಒಳ್ಳೆಯ ದುಡಿಮೆಯಿತ್ತು ಮಹೇಶ್ವರಿಗೆ ವಯಸ್ಸು ಇಪ್ಪತ್ತೆಂಟಾದರೂ ಮದ್ವೆ ಇಲ್ಲ ಯಾರೂ ಮುಂದೆ ನಿಂತು ಗಂಡು ನೋಡದೆ ಇರುವುದರ  ಕಾರಣವೋ ಅಥವ ಕಂಕಣ ಬಲ ಕೂಡಿ ಬರದಿರುವ ಕಾರಣವೋ ಏನೋ ಮದ್ವೆ ಆಗಿರಲಿಲ್ಲ. ಶಿವಮೂರ್ತಿ ಅಕ್ಕ ಗೌರಮ್ಮ ರಾಜಮ್ಮನನ್ನು ಕರೆಸಿ ವಿಷಯ ತಿಳಿಸಲು  ತಮ್ಮ ಬಡತನದ ಇತಿಮಿತಿಗಳನ್ನರಿತಿದ್ದ  ರಾಜಮ್ಮ ಒಪ್ಪಿ ಕೊಂಡರು. ಪರಿಸ್ಥಿತಿಯ ಅರಿವಿದ್ದ ಮಹೇಶ್ವರಿಯೂ ಸಹ ಒಪ್ಪಿಕೊಂಡಳು. ತಮ್ಮನ ಮನೆಗೆ ಬಂದ ಗೌರಮ್ಮನವರು ರಾಜಮ್ಮನಿಗೆ ಪೋನ್ ಮಾಡಿ ಮಗಳನ್ನು ಕರೆದುತರಲು

Read Post »

ಕಾವ್ಯಯಾನ

ಹಾಯ್ಕುಗಳು ಭಾರತಿ ರವೀಂದ್ರ ಸ್ವರ್ಗ ತಾಯಿ ಸ್ವರೂಪ :ಅಕ್ಕನ ಮಡಿಲದು,ಇದುವೇ ಸ್ವರ್ಗ. ಮನ ಹಸಿದ ಹೊಟ್ಟೆ :ನಿದ್ರೆಗೆ ಜಾಗವೆಲ್ಲಿ,ಜಾಗ್ರತ ಮನ. ನೆಮ್ಮದಿ ಇರೆ ನೆಮ್ಮದಿ :ಒಬ್ಬರಿಗೊಬ್ಬರದು,ಚಿಂತೆ ಮಾತೆಲ್ಲಿ. ಹೃದಯ ಶಿಲೆ ಹೃದಯ :ಈ ಜಗ, ಮಮತೆಯಸೆಲೆ ಸಿಗದು. ಸ್ನೇಹ ತುಂಟು ಮನಸ್ಸು :ಬಳಲಿದ ತೃಷೆಗೆ,ಸ್ನೇಹ ಸಿಂಚನ. *************************

Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಅಂಕಣ ಬರಹ ದಂಗೆಯ ದಿನಗಳುಇಂಗ್ಲಿಷ್ ಮೂಲ : ಮನೋಹರ ಮಳಗಾಂವ್‌ಕರ್ ಕನ್ನಡಕ್ಕೆ : ರವಿ ಬೆಳಗೆರೆಪ್ರ : ಭಾವನಾ ಪ್ರಕಾಶನಪ್ರಕಟಣೆಯ ವರ್ಷ : ೨೦೦೮ಬೆಲೆ : ರೂ.೧೮೫ಪುಟಗಳು : ೩೦೪ ಪ್ರಸಿದ್ಧ ಭಾರತೀಯ ಆಂಗ್ಲ ಲೇಖಕ ಮನೋಹರ ಮಳಗಾಂವ್‌ಕರ್ ಅವರ ಐತಿಹಾಸಿಕ ಕಾದಂಬರಿಯ ಅನುವಾದವಿದು. ಬ್ರಿಟಿಷರು ಭಾರತವನ್ನು ಆಕ್ರಮಿಸಿಕೊಂಡ ನಂತರ ಈಸ್ಟ್ ಇಂಡಿಯಾ ಕಂಪೆನಿಯು ವ್ಯಾಪಾರದ ಹೆಸರಿನಲ್ಲಿ ಭಾರತದ ಒಂದೊಂದೇ ರಾಜ್ಯಗಳನ್ನು ಕಬಳಿಸಿಯಾದ ಮೇಲೆ ಭಾರತೀಯರನ್ನು ಹಿಂಸಿಸ ತೊಡಗಿದಾಗ ಅವರ ವಿರುದ್ಧ ಸೇಡು ತೀರಿಸಿ ಅವರನ್ನು ಭಾರತದಿಂದ ಹೊಡೆದೋಡಿಸಲು ೧೮೫೭ರಲ್ಲಿ ನಡೆಸಿದ ಐತಿಹಾಸಿಕ ‘ಮೊದಲ ಸ್ವಾತಂತ್ರ್ಯ ಸಮರ’ದ ಸಂದರ್ಭದಲ್ಲಿ ಸಂಭವಿಸಿದ ಘಟನಾವಳಿಗಳ ಆರ್ದ್ರ ಚಿತ್ರಣ ಇಲ್ಲಿದೆ. ಸಮರದ ಪ್ರಮುಖ ರೂವಾರಿಯಾಗಿ ಕಾರ್ಯ ನಿರ್ವಹಿಸಿದ ನಾನಾ ಸಾಹೇಬನೇ ಇಡೀ ಕಾದಂಬರಿಯ ಕಥನ ಕ್ರಿಯೆಯ ನಿರೂಪಕನಾಗಿದ್ದಾನೆ. ಆಗ ಭಾರತದ ಬಹು ದೊಡ್ಡ ಭಾಗವನ್ನು ಆಳುತ್ತಿದ್ದ ಮರಾಠಾ ಸಾಮ್ರಾಜ್ಯದ ಎರಡನೇ ಪೇಶ್ವೆ ಬಾಜಿರಾಯನ ದತ್ತು ಪುತ್ರ ನಾನಾಸಾಹೇಬ ವಿಶಾಲ ಮನೋಭಾವದ ಸಂವೇದನಾಶೀಲ ವ್ಯಕ್ತಿ. ಇಂಗ್ಲಿಷ್ ವಿದ್ಯಾಭ್ಯಾಸ ಪಡೆದು ಸುಸಂಸ್ಕೃತ ವ್ಯಕ್ತಿಯಾಗಿ ರೂಪುಗೊಂಡ ನಾನಾಸಾಹೇಬನಿಗೆ ಬ್ರಿಟಿಷರು ಮತ್ತು ಭಾರತೀಯರ ನಡುವೆ ಸೌಹಾರ್ದಯುತ ಸಂಬಂಧ ನೆಲೆಗೊಳ್ಳಬೇಕೆಂಬ ಹಂಬಲ. ಆದರೆ ಅವನ ತಂದೆಯ ಕಾಲದಲ್ಲೇ ಅವರ ಮನೆತನಕ್ಕಿದ್ದ ಪೇಶ್ವೆಯೆಂಬ ಬಿರುದನ್ನೂ ವಿಶಾಲವಾದ ರಾಜ್ಯವನ್ನೂ ಕಸಿದುಕೊಂಡು ಅಂಥೋರವೆಂಬ ಚಿಕ್ಕ ಪ್ರದೇಶದ ಒಡೆತನವನ್ನು ಮಾತ್ರ ಬ್ರಿಟಿಷರು ಅವರಿಗೆ ಉಳಿಸಿಕೊಟ್ಟದ್ದು ನಾನಾಸಾಹೇಬನ ಅಸಮಾಧಾನಕ್ಕೆ ಕಾರಣವಾಗುತ್ತದೆ. ಇದು ಅವನ ಬದುಕನ್ನು ಬರಿಯ ಹೋರಾಟವನ್ನಾಗಿಸುತ್ತದೆ. ಈ ಕಾದಂಬರಿಯಲ್ಲಿ ಕೇವಲ ಐತಿಹಾಸಿಕ ಘಟನೆಗಳ ನಿರೂಪಣೆ ಮಾತ್ರವಲ್ಲದೆ ಹಲವು ಪ್ರಮುಖ ಪಾತ್ರಗಳ ಸೃಜನಶೀಲ ಚಿತ್ರಣವಿದೆ. ನಾನಾಸಾಹೇಬನ ಮನೋಭೂಮಿಕೆಯಲ್ಲಿ ನಡೆಯುವ ಎಲ್ಲ ವ್ಯಾಪಾರಗಳ ವಿವರಣೆಯಿದೆ. ದೇಶಭಕ್ತಿ ಮತ್ತು ಧಾರ್ಮಿಕ ದ್ವೇ಼ಷದ ಜ್ವಾಲೆಗಳಿಗಿಂತಲೂ ಮನುಷ್ಯ ಸಂಬಂಧಗಳನ್ನು ಅರ್ಥಪೂರ್ಣವಾಗಿ ಬೆಸೆಯುವುದೇ ಹೆಚ್ಚು ಮಹತ್ವದ ಕೆಲಸವೆಂಬುದನ್ನು ತನ್ನ ಮಾತು, ಯೋಚನೆ ಮತ್ತು ಕೃತಿಗಳ ಮೂಲಕ ತೋರಿಸಿ ಕೊಡುವ ನಾನಾಸಾಹೇಬ ಓರ್ವ ಆದರ್ಶ ವ್ಯಕ್ತಿಯಾಗಿ ನಮ್ಮ ಮುಂದೆ ಬಂದು ನಿಲ್ಲುತ್ತಾನೆ. ಆತನ ವ್ಯಕ್ತಿತ್ವದಲ್ಲಿ ಅಡಕವಾಗಿರುವ ಸದ್ಗುಣಗಳು ಮತ್ತು ಸದಾಚಾರಗಳು ನಮ್ಮ ಮೆಚ್ಚುಗೆಯನ್ನು ಪಡೆಯುತ್ತವೆ ಮಾತ್ರವಲ್ಲದೆ ರಾಜ ಮನೆತನದ ಅನೇಕರಲ್ಲಿರುವ ಲೈಂಗಿಕ ದೌರ್ಬಲ್ಯಗಳ ಬಗ್ಗೆ ಮುಚ್ಚುಮರೆಯಿಲ್ಲದೆ ಹೇಳುವ ನಾನಾಸಾಹೇಬನ ಕಥನವು ಒಂದು ಆತ್ಮ ನಿವೇದನೆಯಂತಿದೆ.ವಸಾಹತೀಕರಣದ ಕಾಲದಲ್ಲಿ ಭಾರತೀಯರು ಅನುಭವಿಸಿದ ಸಂಕಷ್ಟಗಳ ಯಥಾವತ್ತಾದ ಚಿತ್ರಣವೀಯುವ ಈ ಕಾದಂಬರಿ ದಾಖಲೆಯ ದೃಷ್ಟಿಯಿಂದ ಅತ್ಯಂತ ಪ್ರಸ್ತುತವಾಗಿದೆ. ರವಿ ಬೆಳಗೆರೆಯವರ ಅನುವಾದದ ಶೈಲಿಯು ಸುಂದರವೂ ಹೃದ್ಯವೂ ಆಗಿದ್ದು ಸರಾಗವಾಗಿ ಓದಿಸಿಕೊಂಡು ಹೋಗುತ್ತದೆ. ************************************* ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

ಕಾವ್ಯಯಾನ

ಕವಿತೆ ಗೆಜ್ಜೆನಾದ ಅಕ್ಷತಾ ಜಗದೀಶ್ ಸಾವಿರ ಸಾಲಿನ ಪದಗಳಲಿಅಡಗಿ ಕುಳಿತವಳು….ಯಾರಿಗೂ ಕಾಣದಂತೆನಾ ಬರೆವ ಕವನಗಳಲಿ ಮೂಡುತಿರುವಳು…….. ಕವನದ ಸಾಲುಗಳುಅವಳ ಗೆಜ್ಜೆಯನಾದದಹೆಜ್ಜೆಯ ಗುರುತುಗಳು..ಹಾಡಿನ ಪಲ್ಲವಿಯೂಅವಳು ಬಿರುವ ಕಿರುನಗೆಯೂ….ಆಕೆಯ‌ ಸಿಹಿ ಮುತ್ತುಗಳೇ..ಮಳೆಯ‌ ಆ ತುಂತುರು ‌ಹನಿಗಳು.. ಬಾನಲ್ಲಿ ಬಂದು‌ ಹೋಗುವಕಾಮನಬಿಲ್ಲಿನಂತೆ ನೀನು..ಬಣ್ಞಬಣ್ಣದ ನೆನಪು ಬಿತ್ತಿ ಹೋದೆಯೇನು….? ನನ್ನ ಹಾಡಿನ‌ ಅಂತರಾಳ ಅವಳುನನ್ನ ಬಾಳಿನ ಒಡತಿ ಇವಳು..ಹಾಡಿಗೆ ಸ್ಪೂರ್ತಿಯಾಗಿ….ಪದಗಳಿಗೆ ಭಾವವಾಗಿ…ನನ್ನೊಡನೆ ಸೇರು‌ ಮೆಲ್ಲಗೆ.. *********************************

Read Post »

You cannot copy content of this page

Scroll to Top