ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಗಜಲ್‌

ಗಜಲ್‌ ರತ್ನರಾಯ ಮಲ್ಲ ನಿನ್ನ ಬೆಳದಿಂಗಳಿನಂಥ ಕಂಗಳ ನೋಟದಲ್ಲಿ ಕಳೆದು ಹೋಗುತ್ತಿರುವೆನಿನ್ನ ಕಣ್ರೆಪ್ಪೆಯ ಪ್ರೇಮದ ಜೋಕಾಲಿಯಲ್ಲಿ ಸಂಭ್ರಮ ಪಡುತ್ತಿರುವೆ ಚಂದ್ರಬಿಂಬದಂಥ ನಿನ್ನ ಮುಖ ಕಂಡು ನೇಸರನು ಗೂಡು ಸೇರಿಹನುನಿನ್ನ ವದನವನ್ನು ಹತ್ತಿರದಿಂದ ಕಾಣುತ್ತ ಪ್ರೀತಿಯಲ್ಲಿ ಮುಳುಗುತ್ತಿರುವೆ ಕಾಮನಬಿಲ್ಲಿನಂತ ಆಭರಣಗಳ ಕಾಂತಿ ನಿನ್ನ ಅಂದವನ್ನು ಹೆಚ್ಚಿಸುತ್ತಿವೆನಿನ್ನ ಸಾನಿಧ್ಯದಿ ಒಲವಿನ ಪುತ್ಥಳಿಯನ್ನು ಚುಂಬಿಸುತ್ತ ನಲಿಯುತ್ತಿರುವೆ ರಸದೌತಣಕೆ ಆಮಂತ್ರಿಸುತಿವೆ ನಿನ್ನ ವೈಯ್ಯಾರದ ಮೈ ಮಾಟಗಳುಕಲ್ಪವೃಕ್ಷದ ಕೊಂಬೆಗಳಂಥ ಆ ನಿನ್ನ ತೋಳುಗಳನ್ನು ಬಯಸುತ್ತಿರುವೆ ಸುಗಂಧದಂತ ನಿನ್ನ ಉಸಿರಿನಲ್ಲಿ ‘ಮಲ್ಲಿ’ ಬೆರೆತು ಹೋಗುತಿರುವನುಮೆದುವಾದ ನಿನ್ನ ಮಡಿಲಲ್ಲಿ ಹಗಲು-ರಾತ್ರಿಗಳನ್ನು ಎಣಿಸುತ್ತಿರುವೆ **********************************************

ಗಜಲ್‌ Read Post »

ಪುಸ್ತಕ ಸಂಗಾತಿ

‌ಬಾಲಂಗೋಚಿ

ಪುಸ್ತಕ ಸಂಗಾತಿ ‌ಬಾಲಂಗೋಚಿ ಮಕ್ಕಳ ಕವನ ಸಂಕಲನ ‘ಬಾಲಂಗೋಚಿ’ ಮಕ್ಕಳ ಕವನ ಸಂಕಲನ.ಪ್ರಕಟಣೆ: 2019ಪುಟಗಳು: 96ಬೆಲೆ: 90ರೂ.ಪ್ರಕಾಶಕರು: ಗೋಮಿನಿ ಪ್ರಕಾಶನಶಾಂತಿ ನಗರ, ತುಮಕೂರು-2 ದೂರವಾಣಿ: 9986692342 ಮಕ್ಕಳ ಮನವನ್ನು ಅರಳಿಸುವ ಪದ್ಯಗಳು ಅರಳ ಬೇಕು ಚಿಣ್ಣರ ಮನಸು ಮೊಲ್ಲೆ ಹೂವಿನಂತಯೇ ಸಲ್ಲಬೇಕು ಮನುಜ ಕುಲಕೆ ಅದರ ಸೇವೆಯಂತೆಯೇ ಬಾಲ್ಯದ ನೆನಪುಗಳೇ ಎಲ್ಲರಿಗೂ ಒಂದು ರೀತಿಯ ಪ್ರೀತಿ ಹಾಗೂ ಚೈತನ್ಯ ಬಾಲ್ಯ ನೆನಪಾಗುತ್ತಲೇ ನಮ್ಮ ಬದುಕಿನ ಬಹುದೂರದ ಪಯಣವೆಲ್ಲ ಮರೆತಂತಾಗಿ ನಾವೂ ಒಂದು ರೀತಿಯ ಬಾಲ್ಯದ ಖುಷಿಯಲ್ಲಿ ತೇಲತೊಡಗುತ್ತೇವೆ. ಆಗ ಅಲ್ಲಿ ಆಡಿದ ಆಟಗಳು, ಸುತ್ತಾಡಿದ ಜಾಗಗಳು, ಗುಡ್ಡ ಬಯಲುಗಳು, ಹಳ್ಳ ಪ್ರಪಾತಗಳು, ಎತ್ತರದ ಬಂಡೆ, ಕ್ರಿಕೆಟ್ ಚಂಡು, ಪ್ರೀತಿಯ ನಾಯಿಮರಿ, ಬೆಕ್ಕಿನ ಮರಿಗಳಿದ್ದ ಬುಟ್ಟಿ, ಬೀಳುವ ಮಳೆ, ನೀರಿನ ಆಟ, ಶಿಕ್ಷಕರ ಪಾಠ, ಅಮ್ಮನ ಪ್ರೀತಿ ಹಾಗೂ ಸಿಟ್ಟು ಹೀಗೆ ಏನೇನೋ ಕಾಣಲು ತೊಡಗುತ್ತದೆ. ಆಗ ನಾವು ನಮ್ಮ ವಯಸ್ಸನ್ನು ಮರೆತು ಅಲ್ಲಿಯ ದೃಶ್ಯ ಚಿತ್ರಗಳಲ್ಲಿ ಒಂದಾಗುತ್ತ ಆ ಭಾವಕ್ಕೆ ಇಳಿಯಲು ಸಾಧ್ಯವಾಗುವುದು. ಇದನ್ನು ಬಳಸಿಕೊಂಡು ನಾವು ಅಭ್ಯಸಿಸಿದ, ಓದಿದ, ಕಂಡ, ಉಂಡ ಇತರ ಸಂಗತಿಗಳನ್ನು ಸೇರಿಸಿ ಮಕ್ಕಳ ಪ್ರೀತಿಗಾಗಿ ಅವರ ಖುಷಿಗಾಗಿ ಬರೆಯುವುದು  ಮಕ್ಕಳ ಒಲುಮೆಯ ಸಾಹಿತ್ಯವಾಗಿ ರೂಪುಗೊಳ್ಳುತ್ತದೆ. ಇದೆಲ್ಲವನ್ನು ನಮ್ಮಲ್ಲಿರುವ ಬರೆಯುವ ತುಡಿತ ಹಾಗೂ ಶೃದ್ಧೆ ಆಗುಮಾಡುತ್ತದೆ. ಅಂತಹ ತುಡಿತ ಹಾಗೂ ಶೃದ್ಧೆ ಇರದಿದ್ದಲ್ಲಿ ಬಾಲ್ಯಕ್ಕೆ ಮರಳುವ ಭಾವವೇ ಬರದು. ಆದರೂ ತಾನು ಮಕ್ಕಳಿಗೆ ಬರೆಯಬೇಕೆಂಬ ಒತ್ತಡದಲ್ಲಿ ಹೊರಟರೆ ಅದು ನೈಸರ್ಗಿಕ ಕಲಾತ್ಮಕ ರಚನೆ ಆಗದು. ಮೇಲಿನ ಪದ್ಯದ ಸಾಲುಗಳು ಡಾ.ಕೆ.ಬಿ. ರಂಗಸ್ವಾಮಿಯವರದು. ಅವರು “ಬಾಲಂಗೋಚಿ” ಎನ್ನುವ ಮಕ್ಕಳ ಕವನಸಂಕಲನ ರೂಪಿಸಿದ್ದಾರೆ. ವೃತ್ತಿಯಲ್ಲಿ ಮಕ್ಕಳ ತಜ್ಞ ವೈದ್ಯರಾಗಿದ್ದಾರೆ. ರಂಗಸ್ವಾಮಿಯವರಲ್ಲಿ ಇರುವ ಬಾಲ್ಯ ಉಳಿಸಿಕೊಳ್ಳುವ ಹಂಬಲ ಪ್ರೀತಿ ಶೃದ್ಧೆಗಳೇ ಈ ಸಂಕಲನ ರೂಪಿಸಲು ಪ್ರೇರಣೆ ಹಾಗೂ ಯಶಸ್ಸು ಆಗಿದೆ. ‘ಅರಳ ಬೇಕು ಚಿಣ್ಣರ ಮನಸು ಮೊಲ್ಲೆ ಹೂವಿನಂತಯೇ’ ಎನ್ನುವ ಇವರ ಸಾಲು ಎಲ್ಲರ ಆಶಯವೂ ಆಗುತ್ತದೆ. ಮಕ್ಕಳ ಪ್ರೀತಿಯಲ್ಲಿ ನಾವು ಸಮಾಜದ ಒಳಿತನ್ನು ಕಾಣುತ್ತೇವೆ. ಕಾಣ ಬೇಕು. ಅವರ ಮನಸ್ಸು ಅರಳುವುದು ಬಹಳ ಮುಖ್ಯ ಅಂತಹ ಅರಳುವಿಕೆ ನೈಸರ್ಗಿಕವಾಗಿರುವಂತಹ ಪರಿಸರ ನಾವು ಉಂಟುಮಾಡಬೇಕು.  ನಾವೆಲ್ಲ ಮಕ್ಕಳಾಗಿದ್ದಾಗ ಹಾವಾಡಿಗನ ಬೆನ್ನು ಹತ್ತಿದವರೇ. ಸುಡುಗಾಡು ಸಿದ್ಧನ ಜಾದು, ತಂಬೂರಿಯೊಂದಿಗೆ ಪದ ಹೇಳುವವನ ಪದ್ಯ, ಸುಗ್ಗಿಯ ಕುಣಿತ ಎಲ್ಲದರಲ್ಲೂ ಖುಷಿಪಡುತ್ತ ಅವರೊಂದಿಗೆ ಮನೆಯಿಂದ ಮನೆಗೆ ಸುತ್ತಾಡಿದ್ದೂ ಇದೆ. ಈ ರೀತಿಯ ಭಾವ ಎಲ್ಲ ಮಕ್ಕಳಲ್ಲೂ ಇರುತ್ತದೆ. ಆದರೆ ಚಿತ್ರ ಬದಲಾಗಬಹುದು ಅಷ್ಟೇ. ಇಲ್ಲಿ ರಂಗಸ್ವಾಮಿಯವರು ಬರೆದುದನ್ನು ನೋಡಿ. ಬೀದಿಗೆ ಬಂದಿತು ದೊಡ್ಡದೊಂದು ಒಂಟೆ ಓಡಿದ ಸುಬ್ಬನು ನಿಲ್ಲಿಸಿ ತಂಟೆ ಮೇಲಿನ ಸಾಲು ಸಹಜವಾಗಿ ಬಂದಿದೆ. ಅದೇ ಪದ್ಯ ಮುಂದುವರಿದು ಕುಳಿತನು ಸುಬ್ಬ ಓಂಟೆಯ ಮೇಲೆ ತೇಲುವ ಅನುಭವ ಅಂಬರದಲ್ಲೇ ಎನ್ನುವ ಸಾಲೂ ಇದೆ. ಹೌದು ಮಕ್ಕಳ ಕಲ್ಪನಾ ವಿಸ್ತಾರ ಅಧಿಕವಾಗಿರುತ್ತದೆ. ದೊಡ್ಡವರಾದ ನಾವು ಬಹಳಸಾರಿ ನಮ್ಮ ಕಲ್ಪನೆಯನ್ನು ತರ್ಕದಿಂದ ಕಟ್ಟಿಹಾಕುತ್ತೇವೆ ಅನಿಸುತ್ತದೆ. ಮಕ್ಕಳು ಅಂಬರದಲ್ಲಿ ತೇಲುತ್ತಾರೆ, ಸಮುದ್ರದಲ್ಲು ಮುಳುಗುತ್ತಾರೆ ಹಾಗೂ ನಕ್ಷತ್ರಗಳನ್ನು ಚೀಲದಲ್ಲಿ ತುಂಬುತ್ತಾರೆ. ಇದೆಲ್ಲಾ ಅವರ ಕಲ್ಪನಾ ವಿಸ್ತಾರ. ಇಂತಹುದೇ ಕಲ್ಪನೆ ಇದೇ ಪುಸ್ತಕದ ಪ್ರಾಣಿ ಪಕ್ಷಿಗಳ ಸಂಗೀತ, ತರಕಾರಿ ಮದುವೆ,  ಮುಂತಾದ ಪದ್ಯಗಳಲ್ಲೂ ಇದೆ.  ‘ಬದನೆ ತಂದೆ ಸೋರೆ ಕಾಯಿ ತೋರಣ ಕಟ್ಟಿತು ತುಪ್ಪೀರೆ’ ಎಂದೆಲ್ಲ ಬರೆದುದು ಸೊಗಸಾಗಿದೆ. ‘ಪುಟ್ಟೇನಳ್ಳಿ ಪುಟ್ಟ ಭಾರೀ ಭಾರೀ ತುಂಟ ಕುದಿಯುವ ಹಾಲು ಕುಡಿಕೇಲಿಟ್ಟು ಬೆಕ್ಕಿನ ಮೂತಿ ಸುಟ್ಟ.’ ಮಕ್ಕಳು ತುಂಟರೆನ್ನುವುದು ಎಲ್ಲರಿಗೂ ಗೊತ್ತು. ಆದರೆ ಅವರ ತುಂಟತನವನ್ನು, ಮಕ್ಕಳಿಗೆ ಖುಷಿಯ ಓದನ್ನು ಒಟ್ಟಿಗೆ ತಂದಿರುವ ಸಾಲು ಎಲ್ಲಕರಿಗೂ ಹಿತವಾಗುತ್ತದೆ. ಇರುವೆಯನ್ನು ಕಾಣದೇ ತುಳಿದು ಅದನ್ನು ಅಳಬೇಡ ಎಂದು ಸಂತೈಸುವ ಮಕ್ಕಳ ನಿರ್ಮಲ ಜೀವ ಪ್ರೀತಿ, ಸುಮತಿ ಪದ್ಯದಲ್ಲಿ ಮಕ್ಕಳದೇ ಉದಾಹರಣೆಯ ಮೂಲಕ ಒಳಗಿನ ಸೌಂದರ್ಯವೇ ಬಹಳ ಮುಖ್ಯ ಎಂದು ಹೇಳುವ ರೀತಿ ಎಲ್ಲ ಚಿಂತನೆಗೆ ಹಚ್ಚುವಂತಿವೆ. ಹಸು ಕರು, ಹೊಟ್ಟೆಬಾಕ, ಕಂಬಳಿ ಹುಳು, ಹಕ್ಕಿ ಮತ್ತು ಮರ, ಬೆಳ್ಳಕ್ಕಿ ಮುಂತಾದ ಪದ್ಯಗಳೆಲ್ಲ ತುಂಬಾ ಇಷ್ಟವಾಗುವಂತಿವೆ. ಕುಕ್ಕರಳ್ಳಿ ಕೆರೆಯ ತುಂಬಾ ಸಾಲು ಸಾಲು ಕೊಕ್ಕರೆ ಒಂದೇ ಒಂದು ಹಲ್ಲು ಇಲ್ಲ ಬಾಯಿ ತೆರೆದು ನಕ್ಕರೆ ಕೆರೆಯಲ್ಲಿರುವ ಪಕ್ಷಿಗಳನ್ನು ನೋಡುತ್ತ ನಾವು ಮೈಮರೆತು ಬಿಡುತ್ತೇವೆ. ಅವುಗಳ ಈಜು, ನೀರಲ್ಲಿ ಮುಳುಗುವ ರೀತಿ, ದೋಣಿಯಂತಹ ಚಲನೆ, ಎಷ್ಟೇ ಈಜಿದರೂ ಅವುಗಳ ಮೈ ಒದ್ದೆ ಆಗದೇ ಇರುವುದು, ಅವು ಮೀನು ಮುಂತಾದವನ್ನು ಬೇಟೆಯಾಡುವ ರೀತಿ ಎಲ್ಲ ಮಕ್ಕಳಿಗೆ ಬೆರಗೆ. ಅದೇ ರೀತಿಯ ಬೆರಗನ್ನೇ ಇಲ್ಲಿ ಒಂದು ಹೊಸ ನೋಟದೊಂದಿಗೆ ರಂಗಸ್ವಾಮಿಯವರು ಪದ್ಯವಾಗಿಸಿದ ರೀತಿ ಖುಷಿಕೊಡುತ್ತದೆ. ಒಂದೇ ಒಂದು ಹಲ್ಲು ಇಲ್ಲ ಬಾಯಿತೆರೆದು ನಕ್ಕರೆ ಇದು ಸಹಜವಾದರೂ ಅದು ಉಂಟುಮಾಡುವ ಆನಂದ ಬಹಳ ಮಹತ್ವದ್ದು. ‘ಕೊಕ್ಕರೆ ಇರುವ ಕೆರೆಯ ನೋಟ ತಂಪು ತಂಪು ಕಣ್ಣಿಗೆ ನೀರಿನಲ್ಲಿ ಪುತ ಪುತನೆ ಅರಳಿದಂತೆ ಮಲ್ಲಿಗೆ’ ಹೌದು ಮಲ್ಲಿಗೆ ಅರಳಿದ ನೋಟಕ್ಕಿಂತಲೂ ಮಿಗಿಲಾದ ಸಂತಸ ಕೆರೆಯ ತುಂಬಾ ಕೊಕ್ಕರೆಗಳನ್ನು ನೋಡಿದಾಗ ಅಗದೇ ಇರದು. ಮನಕೆ ಮುದ ನೀಡುವ ಮುದ್ದು ಮುದ್ದು ಕೊಕ್ಕರೆ ಅಮ್ಮನಂತೆ ಮುದ್ದಿಸುವೆ ನೀನು ಕೈಗೆ ಸಿಕ್ಕರೆ. ಅಮ್ಮನನ್ನು ಹೇಗೆ ಪ್ರೀತಿಯಿಂದ ಮುದ್ದಿಸುವೆನೋ ಹಾಗೆ ಮುದ್ದಿಸುವೆ ಎನ್ನುತ್ತ ಮಕ್ಕಳನ್ನು ಖುಷಿಯಲ್ಲಿ ಮೀಯಿಸಿದ್ದಾರೆ. ಇಂತಹ ಗೆಲುವಾದ ಪದ್ಯಗಳ ಸಂಕಲನದ ಮೂಲಕ ರಂಗಸ್ವಾಮಿಯವರು ಮಕ್ಕಳ ಮನಸ್ಸನ್ನು ಅರಳಿಸಲು ಪ್ರಯತ್ನಿಸಿದ್ದಾರೆ. ಅವರೇ ಹೇಳಿರುವಂತೆ ಅವರು ತಮ್ಮ ಅನುಭವದ ಮೂಲಕ ಇದನ್ನು ರೂಪಿಸಿದ್ದಾರೆ. ಇನ್ನಷ್ಟು ಹೊಸ ಓದು ಹಾಗೂ ಒಳ್ಳೆಯ ಪದ್ಯಗಳ ಮಾದರಿಗಳನ್ನು ಕಣ್ಣ ಮುಂದೆ ತಂದುಕೊಂಡು ಅವರು ಮತ್ತಷ್ಟು ಗೆಲುವಿನ ಪದ್ಯಗಳೊಂದಿಗೆ ಬರುತ್ತಾರೆ ಎನ್ನುವುದು ನನ್ನ ಆತ್ಮೀಯ ಅನಿಸಿಕೆ. ಈ ಪದ್ಯಗಳನ್ನು ಕನ್ನಡದ ಮಕ್ಕಳು ಓದಬೇಕು, ಅದಕ್ಕೆ ಹಿರಿಯರು ಸಹಕರಿಸಬೇಕು ಎನ್ನುತ್ತ ಉತ್ತಮ ಕೃತಿಗಾಗಿ ರಂಗಸ್ವಾಮಿಯವರನ್ನು ಅಭಿನಂದಿಸುತ್ತೇನೆ. ************************************************************************     ತಮ್ಮಣ್ಣ ಬೀಗಾರ.

‌ಬಾಲಂಗೋಚಿ Read Post »

ಇತರೆ

ಯುವ ಗಜಲ್‌ ಕವಿ ರೇಖಾ ಭಟ್ ಹೆಸರು: ರೇಖಾ ಭಟ್ ಹೊನ್ನಗದ್ದೆಪ್ರಕಟಿತ ಕೃತಿ : ‘ಮಡಿಲ ನಕ್ಷತ್ರ’ ಗಜಲ್ ಸಂಕಲನವೃತ್ತಿ : ಪ್ರಾಥಮಿಕ ಶಾಲಾ ಶಿಕ್ಷಕಿಊರು: ಬಾಳೆಗದ್ದೆ‌. ಶಿರಸಿ ಆಯ್ಕೆಗಳ ಅರಿವಿದ್ದರೆ ಕಸಗಳು ಬೊಗಸೆ ಸೇರುವುದಿಲ್ಲಇಷ್ಟಗಳು ನಿರ್ದಿಷ್ಟವಿದ್ದರೆ ಕಷ್ಟಗಳು ಮೀಸೆ ತಿರುವುದಿಲ್ಲ ಎಲ್ಲ ಕಡೆ ಸುಳಿವ ಗಾಳಿ ಗಂಧ ದುರ್ಗಂಧಗಳ ಉಡಲೇಬೇಕುಬದುಕು ಹಗುರಾಗಿ ತೇಲಿದರೆ ಯಾವುದೂ ಅಂಟಿಕೊಳ್ಳುವುದಿಲ್ಲ ಕುಂದುಕೊರತೆಗಳು ದಾರಿಯ ನಡುವಿನ ಕೊರಕಲಿನಂತಲ್ಲವೇಗಮ್ಯದತ್ತಣ ಸಲೀಸು ನಡಿಗೆ ಎಂದಿಗೂ ಖುಷಿ ನೀಡುವುದಿಲ್ಲ ಎಲ್ಲೋ ಬೇರೂರಿದ ಬಳ್ಳಿ ಹಬ್ಬಿ ಹರಡಿ ಇಲ್ಲಿ ನೆಲೆ ನಿಲ್ಲಬಹುದುಕುತೂಹಲದ ಇಣುಕುನೋಟ ಎಂದೂ ಜೊತೆ ಬರುವುದಿಲ್ಲ ಕತ್ತಲೆಯ ಒಪ್ಪದವಗೆ ಬೆಳಕಿನ ‘ರೇಖೆ ‘ಯದು ದಕ್ಕಿತೇನುಕೊರಗುಗಳ ನುಂಗದೇ ಇಲ್ಲಿ ಕನಸುಗಳು ಅರಳುವುದಿಲ್ಲ *********************************

Read Post »

ಕಾವ್ಯಯಾನ

ಕನಸಿನ ಕೊನೆ

ಕವಿತೆ ಕನಸಿನ ಕೊನೆ ನೀ.ಶ್ರೀಶೈಲ ಹುಲ್ಲೂರು ಬೇಗುದಿಯ ಬೆಂಗೊಡದಕರಿಕಾಯದೀ ಕಥೆಗೆನೂರೆಂಟು ಕನಸು…ಅವಳ ಮುಡಿಗೆ ಚಿನ್ನದ ಹೂಕೊರಳಿಗೆ ಮುತ್ತಿನ ಹಾರಮೈಗೆ ಅಂದದ ರೇಷ್ಮೆ ಸೀರೆಬತ್ತಿದೆದೆಗೊಂದು ಚೆಂದದ ರವಿಕೆ! ಮಕ್ಕಳಾಟಕೆ ಬುಗುರಿ ಪೀಪಿತೂಗುಕುದುರೆ ಓಡಲೊಂದುಕಬ್ಬಿಣದ ಗಾಲಿಪಡೆವಾತುರಕೋ ಒಡಲ ತುಂಬಆಸೆಗಳ ನೂರು ಕಟ್ಟು!ಅಂದವಾದ ಈ ಮೈಕಟ್ಟಿನೊಡೆಯನ ತುಡಿತಕೆಯಾವಾಗಲೂ ಚಿಗುರು! ಧಣಿಯ ದಪ್ಪ ಚರ್ಮದಮೇಲೂ ಅದೆಂಥದೋ ಮಮತೆಬಿಡಿಗಾಸು ನೀಡದವನಅಡಿದಾಸನಾಗಿ ಹರೆಯಸವೆಸುವ ಅಪೂರ್ವ ಸಂತಸಅವಳಿತ್ತ ಬೇಡಿಕೆಯಅಕ್ಷಯಾಂಬರಕೆ ಬೆನ್ನು ತಿರುಗಿಸಿದುಡಿಯುವ ನಗ್ನ ಸತ್ಯ! ಸಂಜೆ ಮನೆಯ ದಾರಿಯಲಿಕಸುವು ಕಳೆದುಕೊಂಡ ದೇಹದಜೊತೆಗೆ ಅದೇ ಖಾಲಿ ಕೈಜೋಮುಗೊಂಡ ಕಾಲಿಗೆ ಬುದ್ಧಿಹೇಳಿ ಹೊಡೆಯುತ್ತಾನೆ ಜೋಲಿಓಣಿಯ ತುಂಬಾ ಕೊಳೆತುಸೀತು ಹೋದ ಚರ್ಮದ ದುರ್ನಾತತಿಪ್ಪೆಗುಂಡಿಯ ಸಂಗ ಮಾಡಿದನೀರು ನಿಂತು ಮಲೆತ ಕೆಸರ ಕುಂಡ! ಎಲುಬೆಣಿಸುವ ತನ್ನ ಪ್ರೀತಿ ನಾಯಿಯಮೈತುಂಬಾ ಕಜ್ಜಿ ಗಾಯ ಕೀವುಅರಿಷಿಣ ಸವರಲು ಬಿಡದ ಅದರರೋಷಕೆ ಇವನು ತಬ್ಬಿಬ್ಬುಮಕ್ಕಳ ರೆಪ್ಪೆ ತುಂಬಾ ಪಿಚ್ಚುಸೋರುತಿಹ ಕಟಬಾಯಿ ಜೊಲ್ಲುಗುಂಡು ಹಾಕಲು ಅಂಗಡಿಯವನಜೊತೆ ಮಾಡಿದ ಗಿಲೀಟು ಠುಸ್! ಝಗಮಗಿಸುವ ಈ ಕಾಲದಲೂಮನೆ ಕತ್ತಲೆಯ ಕೂಪಎಣ್ಣೆಯನ್ನು ಬಿಡದೆ ಬಾಟಲಿಯಚಿಮಣಿಯನ್ನೂ ನುಂಗಿದ ಬೆಂಕಿ ಬತ್ತಿಇಲ್ಲಗಳನೆಲ್ಲ ಎದೆಯ ಮೇಲೇಹೇರಿಕೊಂಡು ನಡೆದವನ ಹಿಂದೆಹೊರಟರು ಕೇರಿಯ ಜನ ಅನ್ನುತ್ತಿದ್ದರುಏನೋ ಮಣಮಣ!ಉಳಿದ ಅವಳೆದೆ ಮಾತ್ರಈಗಲೂ ಭಣಭಣ!! *******************************************

ಕನಸಿನ ಕೊನೆ Read Post »

ಕಥಾಗುಚ್ಛ

ಮುಗಿಲ ಮಲ್ಲಿಗೆ

ಕಥೆ ಮುಗಿಲ ಮಲ್ಲಿಗೆ ರೂಪಕಲಾ ಕೆ.ಎಂ. ಕತ್ತಲೆಯ ಸೆರಗನ್ನು ಹೊದ್ದು ಮಲಗಿದ್ದ ರಸ್ತೆಯಲ್ಲಿ, ವೇಗವಾಗಿ ಚಲಿಸುತ್ತಿದ್ದ ಬಸ್ಸು.. ಅದಕ್ಕಿಂತಲೂ ವೇಗದಲ್ಲಿ ಓಡುತ್ತಿತ್ತು ಹರೀಶನ ಮನಸ್ಸು. ಆಗಾಗ ಎದುರಾಗುವ ವಾಹನಗಳ ಬೆಳಕು ಬಂದು ಕಣ್ಣಿಗೆ ಹೊಡೆದರೂ, ಮನಸ್ಸು ಮಾತ್ರ ಕತ್ತಲೆಯ ಗೂಡಾಗಿತ್ತು.. ಪಕ್ಕದ ಸೀಟಿನಲ್ಲಿ ರಾಧಿಕ ಗಾಢವಾದ ನಿದ್ರೆಯಲ್ಲಿದ್ದಳು.. ಬಸ್ಸಿನ ಪ್ರಯಾಣದಲ್ಲಿಯೂ ಗೊರಕೆ ಹೊಡೆಯುತ್ತ ಮಲಗಿದ್ದ ಸಹ ಪ್ರಯಾಣಕರನ್ನು ನೋಡಿ, ‘ಚಿಂತೆಯಿಲ್ಲದವರೆಗೆ ಸಂತೆಯಲ್ಲೂ ನಿದ್ರೆಯಂತೆ’ ಅನ್ನೊ ಮಾತು ಅವನಿಗೆ ನೆನಪಾಯಿತು.. ಅವನ ಮನ ಪದೇ ಪದೆ ಪ್ರದೀಪನನ್ನೇ ಮೆಲಕು ಹಾಕುತ್ತಿತ್ತು. ‘ಈಗ ಅವನಿಗೆ ಎಷ್ಟು ಖೂಷಿಯಾಗುತ್ತೋ!?, ಪ್ರತಿ ಬಾರಿಯು ಊರಲ್ಲಿದ್ದಾಗ “ನಮ್ಮ ಊರಿಗೆ ಒಂದು ಬಾರಿ ಬಾರೋ, ಆಗ ಗೊತ್ತಾಗುತ್ತೆ.. ಹಳ್ಳಿಯ ಸೊಬಗು ಹೇಗಿರುತ್ತೆ ಅಂತ. ಸಿಟಿಯಲ್ಲಿ ಜೀವನ ಮಾಡೋರಿಗೆ ಪ್ರಕೃತಿಯ ಸೌಂದರ್ಯ ಹೇಗೆ ಗೊತ್ತಾಗುತ್ತೆ ಹೇಳು” ಎಂದಿದ್ದ.. ಈಗ ಊರಿಗೆ ಬರ್ತಿದಿವಿ ಅನ್ನೋ ಪತ್ರ ಕೈ ಸೇರುವಷ್ಟರಲ್ಲಿಯೇ ನಾವೂ ಊರಲ್ಲಿ ಇರ್ತೀವಿ..ಅಬ್ಬಾ ಅವನ ಖುಷಿ ನಮ್ಮ ಕಣ್ಣಾರೇ ನೋಡಬೇಕು’… ಯೋಚನೆಗೆ ಭಂಗ ತರುವಂತೆ ಸಡನ್ ಬ್ರೇಕ್ ಹೊಡೆದಾಗ ಗಾಢವಾದ ನಿದ್ರೆಯಲ್ಲಿದ್ದವರೂ ಕೂಡ ಬೆಚ್ಚಿ ಬಿದ್ದು,ಏನಾಯಿತು ಎಂದು ಸುತ್ತ ಮುತ್ತ ಕತ್ತಲಿನಲ್ಲಿಯೇ ಕಣ್ಹಾಯಿಸಿ ಹುಡುಕುತ್ತಿದ್ದರು. “ಅಬ್ಬಾ, ಏನಾಯ್ತು ಹರೀಶ್!?,” ಮುಂದಿನ ಸೀಟು ಹಣೆಗೆ ತಾಗಿ ನೋವಾದ ಕಡೆ ಒತ್ತುತ್ತ ಕೇಳಿದಳು ರಾಧಿಕ. ಎದ್ದು ನೋಡುವನಿದ್ದ ಅಷ್ಟರಲ್ಲಿಯೇ ಕಂಡೆಕ್ಟರ್ ಬಂದು ” ಏನಾಗಿಲ್ಲ ಹಸು ಅಡ್ಡ ಬಂತು” ” ನೋಡಿ ನಡ್ಸೋಕ್ಕಾಗಲ್ವಾ?, ತಲೆಗೆಷ್ಟು? ಪೆಟ್ಟು ಬಿತ್ತು” ಹಿಂದೆ ಸೀಟಲ್ಲಿದ್ದವರ ಮಾತಿಗೆ.. ” ನೋಡಿ ನಡೆಸ್ತಾ ಇರೋದಕ್ಕೆ ಅಪಾಯ ತಪ್ಪಿದ್ದು ಸರ್. ಇಲ್ಲವಾಗಿದ್ರೆ ಬಸ್ಸು ಪಲ್ಟಿ ಹೊಡಿತಿತ್ತೋ ಅಥವಾ….” ಗುಣುಗುತ್ತಾ ಮುಖ ನೋಡಿ ಹೋದ ಕಂಡೆಕ್ಟರ್ ಮಾತಿಗೆ ಹರೀಶ್ ಹೌದು ಎನ್ನುವಂತೆ ತಲೆ ಆಡಿಸಿದನು. ಹಿಂದೆಯಿಂದ ಮಾತುಗಳು ಕೇಳುತ್ತಲೇ ಇದ್ದವು. ಯಾವುದನ್ನು ತಲೆಗೆ ಹಾಕಿಕೊಳ್ಳದೇ ತನ್ನಷ್ಟಕ್ಕೆ ತಾನು ರಸ್ತೆ ಕಡೆ ದೃಷ್ಟಿ ಇಟ್ಟಿದ್ದ ಡ್ರೈವರ್ ಹತ್ತಿರ ಹೋಗಿ “ಇವುರ್ಗಳಿಗೆ ಬಸ್ಸಲ್ಲು ಹ್ಯಾಂಗ್ ನಿದ್ರೆ ಬತ್ತದೆ ಅಂತ..ದಿನಾ ಓಡಾಡೋ ನಮಗೆ ನಿದ್ದೆ ಇಲ್ಲದಿದ್ದರೂ ನಿದ್ದೆ ಬರಲ್ಲ. ಇನ್ನು ಮೇಲಾಗಿ ಸಲಹೆ ಕೊಡ್ತಾವ್ರೆ”..ಗೊಣಗಿದ ಕಂಡೆಕ್ಟರಿಗೆ.. ” ಏನೋ ನಿಂದು?, ಯಾಕೆ ಗೊಣಗ್ತಿಯಾ.. ಯಾರು ಏನಂದ್ರು ಈಗ?..ಅವರನ್ನು ಬಂದು ಇಲ್ಲಿ ಕೂರಲು ಹೇಳು” ” ಸಾಯ್ಲಿ ಬಿಡಣ್ಣೋ.. ಜೀವ ಹೋದ್ರೂ ನಿದ್ದೆ ಬೇಕು ಅನ್ನೋ ಜನ್ಗಳು”.. ಹರೀಶ ಅವರಿಬ್ಬರ ಮಾತು ಕೇಳಿ ರಾಧಿಕಳ ಕಡೆ ತಿರುಗಿ ನೋಡಿ ನಕ್ಕಾಗ ” ಅವ್ರು ನಂಗಲ್ಲ ಹೇಳಿದ್ದು ಆಯ್ತಾ.. ನೀನೇನೋ ನನ್ನ ನೋಡಿ ನಗ್ಲಿಕ್ಕೆ?,.. ” ಅಯ್ಯೋ ರಾಮ. ನಾನೇನೇ ಅಂದೇ ಈಗ!?,. ” ಏನಿಲ್ಲ ಬಿಡು” ಎನ್ನುತ ರಗ್ಗನ್ನು ಸರಿ ಮಾಡಿಕೊಂಡು ಮುದುರಿ ಮಲಗಿದಳು. ———— ಸೂರ್ಯ ಇನ್ನು ನಿದ್ರೆಯಿಂದ ಎದ್ದಿರಲಿಲ್ಲ ಆಗಲೇ ಹಕ್ಕಿಗಳಿಗೆ ಬೆಳಗಾಗಿತ್ತು.. ಅಲ್ಲಲ್ಲಿ ತಂಬಿಗೆ ಹಿಡಿದು ಹೋಗುವ ಜನರನ್ನು ಕಂಡು… “ಅಬ್ಬಾ ರಸ್ತೆ ಬದಿಯಲ್ಲೇ?…ಕರ್ಮ. ಮರ್ಯಾದೆ ಸಹ ಇರಲ್ವಾ ಇವರಿಗೆಲ್ಲಾ?” ಮೂಗು ಮುಚ್ಚಿಕೊಂಡು ರಾಧಿಕ ಸಿಟ್ಟಿನಲ್ಲಿ ಹೇಳಿದಾಗ.. ” ಇದೆಲ್ಲಾ ಹಳ್ಳಿ ಕಡೆ ಕಾಮನ್ ರಾಧಿಕ, ಇಲ್ಲಿ ಇಷ್ಟೆ.. ಇನ್ನೂ ಕೆಲವು ಕಡೆ ಮಹಿಳೆಯರು ಕೂಡ!”… ” ಬೇಡ ಬಿಡು ಆ ಮಾತು.. ಇವರನ್ನೆಲ್ಲಾ ತಿದ್ದಲು ಆ ಬ್ರಹ್ಮನೇ ಬರಬೇಕೇನೋ… ಅದಿರಲಿ ಈಗ ಪ್ರದೀಪನ ಮನೆ ಎಲ್ಲಿ ಅಂತ ನಿಂಗೆ ಗೊತ್ತಾ?” ” ಇಲ್ಲ,..ಇರು.., ಅಲ್ಲಿ ಯಾರಾನ್ನಾದರೂ ಕೇಳೋಣ” ಎನ್ನುತ್ತ ಸ್ವಲ್ಪ ಮುಂದೆ ನಡೆದರು. ಅಲ್ಲಿಯೇ ಇದ್ದ ಸಣ್ಣ ಗೂಡಂಗಡಿಯಲ್ಲಿ ಇಬ್ಬರು ಟೀ ಕುಡಿದು ವಿಚಾರಿಸಿದಾಗ… ಅವರು ಹೋಗಬೇಕಾದ ಊರು ಇನ್ನು ಒಂದು ಕಿಲೋ ಮೀಟರ್ ದೂರವಿರುವುದಾಗಿಯು ” ಇಲ್ಲೇ ಒಂದು ಆಟೋ ಬತ್ತದೆ ಈಗ. ಅದು ಆ ಊರಿಗೆ ಹೋಗತ್ತೆ ಅದರಲ್ಲಿ ಹೋಗಿ” ಅಂಗಡಿಯವರು ಹೇಳಿದಾಗ ಸರಿಯೆಂದು ಆಟೋಕ್ಕಾಗಿ ಕಾದು ನಿಂತರು. —– ರಾಧಿಕ ಮತ್ತು ಹರೀಶ್ ಮಾರನ ಹಳ್ಳಿ ಪ್ರವೇಶಿಸಿದ ಕೂಡಲೆ ಅಲ್ಲಿ ಯಾರನ್ನಾದರೂ ಕೇಳಿದರೆ ಪ್ರದೀಪನ ಬಗ್ಗೆ ತಿಳಿಯುತ್ತದೆಂದು ಯೋಚಿಸಿದ್ದರು.ಆದರೆ ಅಲ್ಲಿಯೇ ಆಡುತಿದ್ದ ಮಕ್ಕಳನ್ನು ಕೇಳಿದಾಗ ಇವರಿಬ್ಬರ ಕಡೆ ವಿಚಿತ್ರವಾಗಿ ನೋಡಿದರು.ಅದಕ್ಕು ಕಾರಣವಿತ್ತು. ರಾಧಿಕಳ ಉಡುಗೆ ಹರೀಶನ ಉಡುಗೆಯು ಒಂದೇ ತೆರನಾಗಿದ್ದವು. ಮುಂದೆ ಹೋಗಿ ಅಲ್ಲಿಯೇ ಹಲಸಿನ ಮರದ ಕಟ್ಟೆಯಲ್ಲಿ ಕುಳಿತ ಹಿರಿಯರನ್ನು ಕೇಳಿದರು. ಅವರಲ್ಲಿ ಹಿರಿಯರಾದ ಒಬ್ಬರು ಅವರಿಬ್ಬರನ್ನು ತೀಕ್ಷ್ಣವಾಗಿ ನೋಡಿ ” ಅವ , ನಿಮಗ್ ಹ್ಯಾಗ್ ಗೊತ್ತು?” ಎಂದರು. ಅವರ ಮಾತು ಅರ್ಥವಾಗದೆ ಇಬ್ಬರು ಒಬ್ಬರನ್ನೊಬ್ಬರು ಮುಖ ನೋಡಿಕೊಂಡರು.ಅದನ್ನರಿತ ಹಿರಿಯರು ” ಎಲ್ಲಿಂದ ಬಂದ್ರಿ” ” ಸಿಟಿಯಿಂದ, ಪ್ರದೀಪನನ್ನು ಕಾಣಬೇಕಿತ್ತು. ನಾವೆಲ್ಲ ಒಟ್ಟಿಗೆ ಓದಿದವರು” ” ಈಗ ನಿಮಗಾ ಅವ ಸಿಗಂಗಿಲ್ರಿ” ” ಅಂದ್ರೆ!!?” ” ಬನ್ರಿ, ಅವರ ಮನೆಯಾಗ ಬಿಡ್ತೀನಿ” ಎಂದವರೇ ಆ ಹಿರಿಯರು ಎದ್ದು ಮುಂದೆ ಹೆಜ್ಜೆ ಹಾಕಿದರು. ಅವರಿಬ್ಬರೂ ಹಿಂಬಾಲಿಸಿದರು. ಊರಿನ ಹಲವಾರು ಮನೆಗಳನ್ನು ದಾಟಿ ದೊಡ್ಡದೊಂದು ಮನೆಯ ಮುಂದೆ ಬಂದು ನಿಂತು!,. ” ಅದೇ ಅವ್ರ ಮನೆ” ಎಂದರು. ” ಥ್ಯಾಂಕ್ಸ್ ಸರ್” ಎಂದವರೇ ಮನೆಯ ಮುಂದೆ ಹೋಗಿ ಬಾಗಿಲ ಬಳಿ ನಿಂತು ಹರೀಶ ಒಳ ನೋಡುತ್ತ ಕರೆದನು. ” ಪ್ರದೀಪ್,ಪ್ರದೀಪ್” ಇವರ ಸ್ವರ ಕೇಳಿ ಒಳಗಿನಿಂದ ಬಂದ ವ್ಯಕ್ತಿಯನ್ನು ” ಸರ್,ಪ್ರದೀಪ ಇಲ್ವಾ?” ” ನೀವ್ಯಾರು?” “ನಾವು ಅವನ ಫ್ರೆಂಡ್ಸ್. ಕಾಲೇಜಲ್ಲಿ ಒಟ್ಟಿಗೆ ಓದುತ್ತಿದ್ದೆವು, ತುಂಬಾ ತಿಂಗಳಿಂದ ಅವನಿಂದ ಯಾವುದೇ ಸಂಪರ್ಕ ಸಿಗುತ್ತಿಲ್ಲ.ಹಾಗಾಗಿ ನಾವೇ ಬಂದ್ವಿ”. ” ಹೋ, ಹೌದಾ!!,. ಬನ್ನಿ ಒಳಗ, ಪ್ರದೀಪನು ನನ್ನ ಮಗನೇ.ನನ್ನ ಹೆಸರು ಶಿವಪ್ಪ ಅಂತ” ” ನಮಸ್ತೆ ಸರ್,ನಾನು ಹರೀಶ ಅಂತ,ಇವರು ರಾಧಿಕ.ನಾವು ಮೂವರು ಬೆಸ್ಟ್ ಫ್ರೆಂಡ್ಸ್”, “ಹೌದ,ಬನ್ನಿ ಕೂತ್ಕಳ್ಳಿ,ಈಗ ಬಂದೆ” ಎಂದು ಒಳ ಹೋಗಿ ಕುಡಿಯಲು ನೀರು ತಂದರು. ದೂರದಿಂದ ಬಂದವರಿಗೆ ಊಟೋಪಚಾರದ ವ್ಯವಸ್ಥೆಯು ಆದ ನಂತರ ನಿಧಾನವಾಗಿ ಮಾತಿಗೆ ಇಳಿದರು. “ಸರ್, ಈಗ ಅವನೆಲ್ಲಿದ್ದಾನೆ?”. ” ಪ್ರದೀಪ,!? ಈಗ ಎಲ್ಲಿದ್ದಾನೆ ಅಂತ ಹೇಳದು,ನಮಗಾ ಗೊತ್ತಿದ್ದರ ಮನೆಯಲ್ಲಿಯೆ ಇರ್ತಿದ್ದ.ಆದ್ರ ದೇವರು ನಮಗಾ ಅನ್ಯಾಯ ಮಾಡ್ದ” ಎಂದು ನಿಟ್ಟುಸಿರು ಬಿಟ್ಟರು.ಕಣ್ಣಿನಿಂದ ನೀರು ಹೊರ ಬಂದಿತ್ತು .ಇಬ್ಬರಿಗೂ ಗಾಬರಿ .ಅವನಿಗೆ ಏನಾಗಿರ ಬಹುದು?. ಒಳಗಿನಿಂದ ಅಳುವ ಶಬ್ದ ಕೇಳಿ ಬಂತು. ” ಸರ್, ದಯವಿಟ್ಟು ಹೇಳಿ ,ಪ್ರದೀಪನಿಗೆ ಏನಾಯ್ತು?,ಈಗ ಎಲ್ಲಿದ್ದಾನೆ?.” ಕಣ್ಣು ಒರೆಸಿಕೊಂಡು ಹೇಳಲು ಶುರು ಮಾಡಿದರು. ” ಅವನಿಗೆ ಹುಚ್ಚು ಹಿಡಿತಪ್ಪಾ,ಈಗ ಎಲ್ಲಿದ್ದಾನಂತ ಗೊತ್ತಿಲ್ಲ.ಯಾರಾದರು ಅವನನ್ನ ನೋಡಿದೊರು ಬಂದು ಹೇಳ್ತಾರ! ನಾವು ಹೋಗೋದ್ರೊಳಗ ಅವ ಅಲ್ಲಿರಲ್ಲ.ಇದೇ ಆಗದೇಪ್ಪ ಆರು ತಿಂಗಳಿಂದ”, ಬಿಕ್ಕಿದರು. ಹರೀಶ್ ಕುಳಿತಲ್ಲಿಂದ ಎದ್ದು ಬಂದು ಅವರ ಕೈ ಹಿಡಿದು ಸಮಾಧಾನ ಮಾಡುತ್ತ ಕೇಳಿದ. ” ಇದೆಲ್ಲ ಹೇಗಾಯ್ತು ಸರ್”, ” ಪಿರುತಿ ಮಾಡಿದ್ದನಪ್ಪ..ಆ ಮಗ ಸತ್ತು ಹೋದ್ಲು,ಅದರ ನೋವು ತಡಿಲಾರ್ದೆ ಇವ ಹುಚ್ಚ ಆದ.ಸ್ವಲ್ಪ ದಿನ ತಡಿದಿದ್ರೆ ಇಬ್ಬರ ಮದುವೆ ನಾವೇ ಮಾಡೋರು.ಆದ್ರ ದೇವ್ರಿಗ ನಮ್ಮ ಮೇಲ ಕರುಣೆ ಇಲ್ಲ ನೋಡಿ.ಇದ್ದ ಒಬ್ಬ ಮಗನ್ನ ಹೀಗಾ ಮಾಡ್ಬಿಟ್ಟ”, ಮತ್ತೆ ಅಳಲು ಶುರು ಮಾಡಿದ್ರು.ರಾಧಿಕಳ ಕಣ್ಣಲ್ಲಿ ಆಗಲೆ ನೀರು ಇಳಿಯುತಿತ್ತು.ಮನೆಯ ಒಳಗಿನ ಅಳು ಸ್ವಲ್ಪ ಕಡಿಮೆ ಆಗಿತ್ತು.ಶಿವಪ್ಪನವರ ದುಃಖ ನೋಡಲಾಗದೆ ಹರೀಶ್ ನಿಧಾನವಾಗಿ ಎದ್ದು ಹೊರ ಬಂದ.ರಾಧಿಕ ಕೂಡ ಅವನ ಹಿಂದೆಯೆ ಬಂದಳು. ಏನೋ ಯೋಚಿಸಿದವರಂತೆ ಮತ್ತೆ ಒಳಗಡೆ ಬಂದವರು ಕುರ್ಚಿಯಲ್ಲಿ ಕುಳಿತರು. ” ಸರ್ ನಮಗೆ ಪ್ರದೀಪನ ಪೂರ್ಣ ಮಾಹಿತಿ ಬೇಕು.ಕಾಲೇಜು ಬಿಟ್ಟು ಬಂದಲ್ಲಿಂದ ಇಲ್ಲಿ ಏನಾಯಿತು ಅಂತ ತಿಳಿಸಲು ಆಗತ್ತ.ನಮಗೆ ನಮ್ಮ ಮೆಚ್ಚಿನ ಗೆಳೆಯನ ಜೀವನ ಹೀಗೆ ಆಗಿದ್ದು ನಂಬಲು ಆಗುತ್ತಿಲ್ಲ.ದಯವಿಟ್ಟು ವಿವರವಾಗಿ ತಿಳಿಸಿ ಸರ್”, ಅವರಿಬ್ಬರನ್ನು ಒಮ್ಮೆ ನೋಡಿದರು.’ಪ್ರದೀಪನ ವಯಸ್ಸಿನವರೆ’ ಅನ್ನಿಸಿತು.ಹರೀಶನನ್ನು ನೋಡಿ ಮಗನ ನೆನಪಾಗಿ ಕಣ್ತುಂಬಿ ಬಂದವು. ನಡೆದ ಕಥೆ ಹೇಳಲು ಶುರು ಮಾಡಿದರು. “ನಂಗಾ ಇಬ್ರು ಮಕ್ಳು.ಮಗಳ ಮದ್ವಿ ಆಗದೆ. ಇವ ಓದು ಮುಗ್ಸಿ ಊರಿಗೆ ಬಂದ.ನಾವು ಅವ್ನ ಕೆಲ್ಸದ ವಿಷಯ ಏನೂ ಹೇಳಿಲ್ಲ.ಮನೇಲಿ ಮೂರು ತಲೆಮಾರಿಗೂ ಕೂತು ಉಣ್ಣೊಷ್ಟು ಇರುವಾಗ ಅವ ಕೆಲಸಕ್ಕೆ ಹೋಗೂ ಅಗತ್ಯ ನಂಗಿರ್ಲಿಲ್ಲ”, ಮಾತು ನಿಲ್ಲಿಸಿ ಒಳಗೆ ನೋಡಿದರು. ಹೆಂಡತಿಗೆ ತನ್ನ ಮಾತು ಕೇಳಿದರೆ?. ” ನಿಮ್ಗೆ ದಣಿವಿಲ್ಲಾಂದ್ರಾ ತೋಟಕ್ ಹೋಗುಣಾ?”, ಮೂವರು ಎದ್ದು ಹೊರ ಹೋಗುವಾಗ ಲಕ್ಷ್ಮಮ್ಮನವರು ಹೊರ ಬಂದರು.ಅವರಿಗೆ ತೋಟಕ್ಕೆ ಹೋಗಿ ಬರುತ್ತೆವೆಂದು ಹೇಳಿ ಹೊರಟರು. *** ಊರ ಹೊರಗಿನ ಹೊಲದ ಮಧ್ಯದಲ್ಲಿ ಒಂದು ಪುಟ್ಟ ಮನೆ. ಸುತ್ತಲೂ ಹಚ್ಚ ಹಸಿರಾದ ಪೈರು.ಹೂ ಬಿಟ್ಟು ಭತ್ತದ ತೆನೆ ಬಿಡುವ ಸಮಯ.ಗಾಳಿ ಬಂದರೆ ಪೈರಿನ ಪರಿಮಳ ಮೂಗಿಗೆ ತಾಗಲು, ‘ಅಹ್ಹಾ’,ಎಷ್ಟೊಂದು ಅಹ್ಲಾದಕರ. ಗದ್ದೆ ಅಂಚಿನ ಮೇಲೆ ಮೆಲ್ಲನೆ ಹೆಜ್ಜೆ ಹಾಕುತ್ತ ನಡೆಯುತಿದ್ದಳು ಮಲ್ಲಿ. “ಯಾರಲ್ಲಿ?”. ಕೂಗಿಗೆ ಹೆದರಿ ನಿಂತಳು.ತಿರುಗಿ ನೋಡಿದರೆ ತನಗೆ ಸ್ವಲ್ಪ ದೂರದಲ್ಲಿಯೆ ಒಬ್ಬರು ದ್ವಿಚಕ್ರ ವಾಹನದಲ್ಲಿ ನಿಂತಿದ್ದರು. ಅವರನ್ನು ಎಂದೂ ನೋಡಿರಲಿಲ್ಲ .’ಯಾರಿರ ಬಹುದು?’ಎಂದು ಕುತೂಹಲದಲ್ಲಿರುವಾಗಲೆ ಮತ್ತದೇ ದ್ವನಿ. “ನಿನ್ನನ್ನೆ ಕೇಳಿದ್ದು, ಯಾರು ನೀನು?.ಎಲ್ಲಿಯೂ ನೋಡಿದ ನೆನಪಿಲ್ಲ.ಹೊಸ ಮುಖದ ಹಾಗೆ ಕಾಣುತ್ತಿಯ!?” “ನಾನು ಮಲ್ಲಿ,ಸುಬ್ಬಣ್ಣನ ಮಗಳು” “ಹೌದಾ!!?.ನಮ್ಮ ಸುಬ್ಬಣ್ಣನ ಮಗಳಾ?.ಇಷ್ಟು ದಿನ ಎಲ್ಲಿದ್ದೆ?.ಒಂದು ದಿನವು ಕಾಣಲಿಲ್ಲ!!?” ” ನಾನು ಸಿಟಿಯಲ್ಲಿನ ಚಿಕ್ಕಪ್ಪನ ಮನೆಯಲ್ಲಿದ್ದು ಕಲಿತಿದ್ದೆ” “ಎಷ್ಟನೆ ಕ್ಲಾಸಿನವರೆಗೆ ಓದಿದ್ದಿಯಾ” “ಹತ್ತು, ಪಾಸು”. “ಮುಂದೆ!?” ಅವರ ಮಾತನ್ನು ತಡೆಯುವಂತೆ “ನೀವ್ಯಾರು!?”ಎಂದು ಕೇಳಿ ನಾಲಿಗೆ ಕಚ್ತಿಕೊಂಡಳು. “ಹೋ, ನೋಡಿದ್ಯಾ ನಿನ್ನ ಬಗ್ಗೆ ಕೇಳುವ ಆತುರದಲ್ಲಿ ನಾನು ಯಾರು? ಅಂತ ಹೇಳಲೆ ಇಲ್ಲ ಅಲ್ವಾ?.ನಾನು ಈ ಊರಿನ ಗೌಡರ ಮಗ ಪ್ರದೀಪ. ನಿನ್ನ ತಂದೆ ನಮ್ಮ ಮನೆಯಲ್ಲೆ ಕೆಲಸ ಮಾಡೋದು.ನಿನ್ನ ಹಾಗೆಯೆ ಸಿಟಿಯಲ್ಲಿ ಓದುತಿದ್ದೆ.ಈಗ ಸಧ್ಯಕ್ಕೆ ಓದು ಮುಗಿಯಿತು.ಕೆಲಸಕ್ಕೆ ಪ್ರಯತ್ನ ನಡೆಸಬೇಕು.” ಸಾಕ? ಎನ್ನುವಂತೆ ಅವಳ ಕಡೆ ನೋಡಿದನು. ಒಂದೇ ಉಸಿರಲ್ಲಿ ಮಾತನಾಡಿ ಮುಗಿಸಿದ ಅವನನ್ನೇ ತದೇಕ ಚಿತ್ತದಿಂದ ನೋಡುತಿದ್ದಳು.ಅವನೂ ಸಹ ಮಾತು ನಿಲ್ಲಿಸಿ ಮಲ್ಲಿಯ ಕಡೆ ನೋಡಲು ಇಬ್ಬರ ಕಣ್ಣುಗಳ ಮಿಲನವಾಯಿತು.ಮಲ್ಲಿ ಅವನ ನೋಟಕ್ಕೆ ನಾಚಿ ತಲೆ ತಗ್ಗಿಸಿದಳು.ಪ್ರದೀಪ ಮಾತ್ರ ಮಲ್ಲಿಯ ಅಂದವನ್ನು ಸವಿಯುವದರಲ್ಲೆ ಮಗ್ನನಾದ. ಹಾಲು ಕೆನ್ನೆಯ ದುಂಡನೆಯ ಮುಖದಲ್ಲಿ ಕಾಡಿಗೆಯ ಅಗತ್ಯವೇ ಇಲ್ಲದಂತೆ ಹೊಳೆಯುವ ಕಣ್ಗಳು..ನೀಳವಾಗಿ ಉದ್ದವಾದ ಕೂದಲನ್ನು ಎಣ್ಣೆ ಹಾಕಿ ಬಲವಂತವಾಗಿ ಬಾಚಿದಂತೆ ಕಂಡರು, ಅವಳಿಗದು ಅಂದ ತಂದಿತ್ತು.ಬಲ ಕಿವಿಯ ಹತ್ತಿರ ಇಳಿ ಬಿದ್ದ ಗುಂಗುರು ಕೂದಲು. ಕಿವಿಯಲ್ಲಿ ಸಣ್ಣದೊಂದು ಓಲೆ. ಎರಡೂ ಕೈಯಲ್ಲಿ ನಾಲ್ಕೇ ನಾಲ್ಕು ಮಣ್ಣಿನ ಕೆಂಪು ಬಳೆಗಳು ಅವಳ ಬಿಳಿ ಕೈಗಳಿಗೆ ಮುದ್ದಾಗಿದ್ದವು. ಹೆಚ್ಚೇನು ಎತ್ತರವಿಲ್ಲದ ಅತಿ ದಪ್ಪವು ಅಲ್ಲದ ಅವಳು, ಒಮ್ಮೆ ನೋಡಿದರೆ ಮತ್ತೆ ತಿರುಗಿ ನೋಡಬೇಕೆನ್ನಿಸುವ ಶರೀರ,ಅದರಲ್ಲೂ ಮೈಯನ್ನಪ್ಪಿದ ಲಂಗ ರವಿಕೆಯಲ್ಲಿನ ದೇಹದ ಸಿರಿ, ಪ್ರದೀಪನಿಗೆ ಸಿಟಿಯ ವೈಯ್ಯಾರಿಯರ ಮಧ್ಯೆ ಕೂಡ ಮಲ್ಲಿಯೇ ಅಂದವಾಗಿ ಕಂಡಿದ್ದಳು. ಪ್ರದೀಪನ ಕಣ್ಣು ತನ್ನ ಮೇಲಿರುವುದು ಅರಿತ ಮಲ್ಲಿ, ಮೆಲ್ಲನೆ ನಾಚಿ ಜಿಂಕೆಯಂತೆ ಓಡುವ ಸನ್ನಾಹ ಪ್ರದೀಪನ ಅರಿವಿಗೆ ಬಂದದ್ದೆ ತಡ ಅವಳನ್ನು ತಡೆಯುತ್ತಾ ”

ಮುಗಿಲ ಮಲ್ಲಿಗೆ Read Post »

ಇತರೆ

ಕಾಗೆ…

ಲೇಖನ ಕಾಗೆ… ಡಾ. ಅರಕಲಗೂಡು ನೀಲಕಂಠ ಮೂರ್ತಿ ನಾನೊಂದು ಕಾಗೆ, ನಿಜ. ಅಪ್ಪಟ ಕಪ್ಪು, ನಿಜ. ನನ್ನ ‘ಮಧುರ’ ಧ್ವನಿ ನಿಮಗೆ ಕರ್ಕಷ! ಬಹುಶಃ ಅದೂ ಕೂಡ ನಿಜ! (ನಿಮ್ಮದೇ ಕಣ್ಣು ಕಾಣುವ ಕೋನದಿಂದ ಮಾತ್ರ). ನಿಮ್ಮ ಹಾಗೆ ನಮ್ಮ ಪಕ್ಷಿ ಲೋಕದ ಲ್ಲಿ, ಕಪ್ಪು ಅಂದಾಕ್ಷಣ ಅಸಹ್ಯವಿಲ್ಲ. ನಿಮ್ಮಲ್ಲೋ ಎಂಥೆಂತಹ ಅಸಹ್ಯ ಭಾವನೆಗಳಿಲ್ಲ ಹೇಳಿ – ಒಬ್ಬನನ್ನೊಬ್ಬ  ಕಂಡಾಗ ನಿಮ್ಮ ನಿಮ್ಮ ನಡುವೆ!  ನಾವು ವೈವಿಧ್ಯಮಯ ಜಗತ್ತನ್ನು ನಮ್ಮ ಉಗಮದಿಂದಲೇ ಗೌರವದಿಂದ ಭಾವಿಸಿಕೊಂಡು ಬಂದವರು; ಇಂದಿಗೂ ಹಾಗೇ, ಸ್ವಲ್ಪವೂ ಲೋಪವಿಲ್ಲದ ಹಾಗೆ  ಗೌರವಿಸುವವರು! ಯಾವ ಹಕ್ಕಿಯೂ ಇತರರ ಬಣ್ಣದ ಬಗ್ಗೆ, ಬಾಳಿನ  ಬಗ್ಗೆ, ಧ್ವನಿಯ ಬಗ್ಗೆ,  ನಿಮ್ಮನಿಮ್ಮಲ್ಲೇ ನೀವು ಮೂಗು ಮುರಿಯುವ ಹಾಗೆ, ನಾವು ನಮ್ಮ ನಮ್ಮ ಕೊಕ್ಕು ಮುರಿದವರಲ್ಲ ಎಂದೆಂದೂ,  ಮುಂದೂ ಕೂಡ. ಕಾಗೆ ದೂರವಿರು ಎಂದು ಕೋಗಿಲೆಯಾಗಲೀ, ಮುದ್ದು ಗಿಣಿಯಾಗಲೀ ಅಥವಾ ಇನ್ನೊಂದು ಪಕ್ಷಿಯಾಗಲೀ ಎಂದೂ ಕೂಗಿದ್ದು, ರಂಪ ಮಾಡಿದ್ದು ಕಂಡಿಲ್ಲ! ನೀವೋ  ‘ಓದು-ಬರೆಹ’ ಅನ್ನುವುದನ್ನು ತಿಳಿಯದವರೂ ಅಲ್ಲ  – ನಮ್ಮ ಹಾಗೆ (ಹಾರುವ ಹಕ್ಕಿಗೆ ಎಲ್ಲಿಯ, ಅದೆಂಥ ಓದು, ಎಂತಹ ಶಾಲೆ – ಹಾರುವ ಪಾಠ ಅಲ್ಲದೆ)! ಬಹಳ ತಿಳಿದವರೂ ಸಹ, ಹೌದಲ್ಲವೇ; ಬುದ್ಧಿ ಇರುವವರು. ವಾಸ್ತವವಾಗಿ ವಿಪರೀತ ಬುದ್ಧಿ ಇರುವವರು. ಬಹುಶಃ ವಿನಾಶೀ  ಬುದ್ಧಿ ಇರುವವರೂ, ಹೌದು… ನೀವು ಎಂತಹವರೇ ಆದರೂ ಕೂಡ, ನೀವು ಸತ್ತು ಬಿದ್ದಾಗ, ನಿಮ್ಮ ಬಾಯಿಂದ ನಮ್ಮದೇ ಸ್ತುತಿ! ನಾವೇ ದೇವರೋ ಎಂಬಂತೆ, ಕಾಗೆಗಳದ್ದೇ ಜಪ…ನಿಜ ಅಲ್ಲವೇ; ನೀವೇ ಕೊಟ್ಟು ಕೂರಿಸಿದ್ದೀರಲ್ಲವೇ, ನಮಗೆ ಶನಿ ಮಹಾತ್ಮನ ವಾಹನದ ಪಟ್ಟ! ಮತ್ತೆ, ಭಯವಲ್ಲವೇ… ಆಹಾ…ಅದೇನು ಬಾಯಿ ಬಿಡುವಿರೋ; ನಮಗಾಗಿ ಕಾಯುತ್ತ, ಕಾಯತ್ತ ಕೂರುವಿರೋ, ನಿಮಗೇ ಪ್ರೀತಿ… ಅಷ್ಟೇ ಅಲ್ಲ! ನೀವು ಹರಿಶ್ಚಂದ್ರನಂಥ  ಮಹಾತ್ಮನನ್ನೇ ಬಿಟ್ಟಿಲ್ಲ. ಅವನನ್ನೂ ಕೂಡ ‘ಸ್ಮಶಾನ’ದ ‘ವಾಚ್ಮನ್’ ಕೆಲಸಕ್ಕೆ ಅಂತ ಇಟ್ಟಿಬಿಟ್ಟಿದ್ದೀರಲ್ಲವೇ! ಅಲ್ಲದೆ, ಅದೇ ಸ್ಥಳದಲ್ಲಿ ನಾವು ಕೂಡ ಅತಿಥಿಗಳು, ನಿಮ್ಮವರು ಸತ್ತುಬಿದ್ದಾಗ…ನಮಗೆ ಕೂಳು, ಹರಿಶ್ಚಂದ್ರನಿಗೆ ಕೈತುಂಬಾ ಕಾಯಕ! ಎಂಥ ಭಾಗ್ಯ… ಹೌದು, ನಾವು ಅಕಸ್ಮಾತ್, ನೀವು ಭಯದಿಂದ ನೀಡುವ ‘ಕೂಳು’ ತಿನ್ನದೇ ಹಾಗೆಯೇ ಮೂಸಿ ಹಾರಿಹೋದರೆ, ನಿಮ್ಮ ನಿಮ್ಮಲ್ಲೇ ಆ  ಸಂದರ್ಭದಲ್ಲಿ ಎಂಥೆಂಥಾ ಚಿಂತೆಗಳು ಆರಂಭವಾಗಿ ಎಷ್ಟು ಹಿಂಸೆ ಅಲ್ಲವೇ. ಎಲ್ಲ ಪಾಪಗಳು, ಪ್ರಾಯಶ್ಚಿತ್ತಗಳು ಒಟ್ಟೊಟ್ಟಿಗೆ ಕಾಣುತ್ತವೆ! ನಮ್ಮ ಪ್ರಾಣಿ ಪಕ್ಷಿಗಳು ಸತ್ತರೆ, ನಮಗೆ ಅಂಥ ಯಾವ ಚಿಂತೆಯೂ ಇಲ್ಲ; ಬದಲಿಗೆ, ರಣಹದ್ದಿಗೆ ಅಹಾರವಾಗಿ ‘ಪುಣ್ಯ’ ಪಡೆಯುತ್ತೇವೆ! ಅಂತಹ ಸಂದರ್ಭದಲ್ಲಿ, ನಾವು ನಿಮ್ಮ ಕೂಳು ತಿನ್ನದ ಹೊತ್ತಿನಲ್ಲಿ, ಸತ್ತವರ ಗತಿ! ಸ್ವರ್ಗವಂತೂ ಖಂಡಿತ ಇಲ್ಲ; ಹಾಗಾದರೆ, ನರಕವೋ ಅಥವಾ ತ್ರಿಶಂಕುವೋ, ಇನ್ನೆಲ್ಲೋ ಎಂಬ ಜಿಜ್ಞಾಸೆ, ಅಲ್ಲವೇ? ಅಲ್ಲ ರೀ, ನೀವೇ ಇಲ್ಲದೆ, ಜಡವಾಗಿ, ಉಸಿರೇ ನಿಂತು, ಇನ್ನೇನು ಹಾಗೇ ಬಿಟ್ಟರೆ ಗಬ್ಬು ನಾತ ಅನ್ನುವ ಪರಿಸ್ಥಿತಿ ಯಲ್ಲೂ, ಅಯ್ಯೋ, ಇನ್ನೇನು ಗತಿಯೋ ಅನ್ನುವ ಹಾಸ್ಯಾಸ್ಪದ ಚಿಂತನೆ… ಅದಿರಲಿ ಈ ರೀತಿಯ ಯೋಚನೆ, ಹೊರಟು ಹೋದವರ ಮುಂದಿನ ಗತಿಯ ಬಗ್ಗೆಯೋ ಅಥವ ಹೋದವರು ಬಂದು ಇರುವವರಿಗೆ ಪೀಡನೆ ಉಂಟು ಮಾಡಿ, ಅವರ ಬಾಳನ್ನೇ ನರಕಕ್ಕೆ ನೂಕಿಬಿಡುವರು ಎಂಬ ಗಾಢ ನಂಬಿಕೆಯ, ಸ್ವಾರ್ಥವೋ…! ಎಂಥಹವರಯ್ಯ ನೀವು, ಮನುಷ್ಯರು, ಯಾವ ಪ್ರಾಣಿಪಕ್ಷಿ ಬೇಕಾದರೂ ತಿಂದು ತೇಗಿಬಿಡುವವರು, ಅಥವ ಅವುಗಳ ಇರುವನ್ನೇ ಇಲ್ಲವಾಗಿಸಿ ಧೂಳೀಪಟ ಮಾಡುವವರು; ಈಗಾಗಲೇ ಅರ್ಧಂಬರ್ದಕ್ಕೂ ಮಿಗಿಲಾಗಿ ನಾಶ ಮಾಡಿರುವವರು, ಒಂದು ಯಕಃಶ್ಚಿತ್ ಕಾಗೆಗಾಗಿ ಬಾಯಿಬಿಡುತ್ತೀರಿ ನಿಮ್ಮ ಸಾವಿನ ಸಮಯದಲ್ಲಿ! ಮತ್ತು, ಅದೇ ಕಾಗೆ ಅಂದರೆ ದೂರವೋ ದೂರ ಇದ್ದುಬಿಡುವಿರಿ, ಹೆದರಿ! ಶನಿದೇವರ ವಾಹನವೆಂದೋ; ಅಥವ ಶನಿಯೇ ನಿಮ್ಮ ಹೆಗಲೇರಿಬಿಡುವನೋ ಎಂಬಂತೆ; ಅಥವಾ ನೀವೂ ಸತ್ತೇಹೋಗುವ ಭಯವೋ. ಎಲ್ಲಿ, ಈ ಕರಿಕಾಗೆಯ ಕಪ್ಪು ಶಾಪ ಕೂಡ  ಹೆಗಲೇರುವುದೋ ಎಂಬ ಭಯವೋ? ಇರಬಹುದು, ಅದಕ್ಕಾಗಿಯೇ ಅಲ್ಲವೇ, ನೀವು ಕಾಗೆಗಳನ್ನೇ ತಿನ್ನದೇ ಇನ್ನೂ ಉಳಿಸಿರುವುದು! ಎಲೈ, ಜ್ಞಾನ-ವಿಜ್ಞಾನಗಳೆಲ್ಲದರ ಪ್ರಭೃತಿಗಳಾಗಿರುವ ಮಾನವರೇ, ಇಂತಹ ಅನನ್ಯ ತಿಳಿವು ತುಂಬಿರುವ ತಲೆಯಲ್ಲಿ ಮತ್ತು ನಿಮ್ಮೆದೆಯಲ್ಲಿ ಒಂದೇ ಒಂದಿಷ್ಟಾದರೂ ಕರುಣೆ ಬೇಡವೇ–ಪ್ರಾಣಿ ಪಕ್ಷಿಗಳ ಬಗ್ಗೆ! ಕೇವಲ ಸ್ವಾರ್ಥಕ್ಕೆ ಮಾತ್ರ  ಅವುಗಳ ಉಪಯೋಗವೇ? ನಿಮ್ಮ ಮೃಗಾಲಯಗಳು ಕೂಡ ಅದೇ ರೀತಿಯ ಮೋಜಿನ ಸ್ವಾರ್ಥಕ್ಕಾಗಿ ಅಲ್ಲವೇ… ಹಾಗಂತ, ನೀವು ಪ್ರಪ್ರಥಮ ಬಾರಿಗೆ ಈ ಭುವಿಯ ಮೇಲೆ ಜೀವ ತಳೆದು, ನಿಮ್ಮ ನಿಮ್ಮ ಸಂತಾನವನ್ನೇ ಬೆಳೆಯತೊಡಗಿದಾಗ, ಈ ಜಗದೊಳು ಇದ್ದ ಪ್ರಾಣಿ ಪಕ್ಷಿಗಳ ಸಂಖ್ಯೆಯಾದರೂ ಎಷ್ಟೆಂದು ನಿಮಗೆ ಅರಿವಿಲ್ಲದೆ ಇಲ್ಲ ಅಲ್ಲವೇ? ಇದೆ, ಹೌದು ತಾನೆ? ಅಂದಮೇಲೆ ನಿಮಗೇ ತಿಳಿದಿರಬೇಕಲ್ಲವೇ “ಈ ಜಗದ ನೆಲದಮೇಲೆ ನೀವು ಫ್ರಥಮರೋ ಅಥವಾ ನಾವೋ…!” ನಮ್ಮ ಪಕ್ಷಿಗಳ ಸಮಾಚಾರ ಬಂದಾಗ, ಹ್ಞಾ, ಇನ್ನೊಂದು ಮುಖ್ಯ ವಿಷಯ! ನೀವು ನಿಮ್ಮ ‘ಬೆಳೆ’ಯನ್ನೇ  ವೃದ್ಧಿಪಡಿಸುವ ಕ್ರಾಂತಿಯಲ್ಲಿ, ಇಡೀ ಭೂಮಿಯನ್ನೇ ಒಂದಿಷ್ಟೂ ಜಾಗವಿರದ ಹಾಗೆ ತುಂಬಿಕೊಂಡರೂ ಕೂಡ, ನಮಗೇನೂ ಚಿಟಕಿಯಷ್ಟೂ ಚಿಂತೆಯಿರದು! ಆಗಲೂ ನೀವೇ ನೋಡುವಿರಿ: ನಮಗೆ ದಷ್ಟ ಪುಷ್ಟ ವೃಕ್ಷಗಳಿರುತ್ತವೆ ಗೂಡು ಕಟ್ಟಲು, ಅನಂತ ನೀಲಿ ನಭವಿರುತ್ತದೆ ಸ್ವಚ್ಛಂದದ ಹಾರಾಡಲು ಮತ್ತು ನಿರಂಬಳ ಉಸಿರಾಡಲು…ಆದರೆ.. . ನಿಮ್ಮ ಮುಂದಿನ ವಂಶಜರು ಈ ವಸುಂಧರೆಯ ಹವಾಮಾನದಲ್ಲಿ ಏರುಪೇರಾಗದ ಹಾಗೆ, ಇನ್ನೂ ಒಂದಿಷ್ಟು ಗಾಳಿ ಮುಂತಾಗಿ ಉಳಿಸಿದ್ದರೆ…ಮಾತ್ರ! ನಿಮ್ಮ ನಭೋಮಂಡಲವನೆ ಭೇದಿಸಿರುವ ತಿಳಿವಿಗೆ, ಕ್ಷುಲ್ಲಕ ಕಾಗೆ- ಯಂತಹ, ಕಗ್ಗತ್ತಲೆಯಲೂ ಕಾಣದ ಈ ಕರಿಜೀವಿಯ ಇಷ್ಟು ಸಣ್ಣ ಅಹವಾಲು ಸಾಕಲ್ಲವೇ, ಗ್ರಹಿಕೆಗೆ: ನೀವು ಪೂಜಿಸುವ ಭಗವಂತನ ಅನುಗ್ರಹದಿಂದಲಾದರೂ, ಭಾರವಾಗುವತ್ತ ನಡೆದಿರುವ ಈ ಭುವನದಲ್ಲಿ, ನಮ್ಮಂತಹ ಪ್ರಾಣಿ ಪಕ್ಷಿಗಳಿಗಾಗಿ ಕಿಂಚಿತ್ತಾದರೂ ಇರಲಿ ಜಾಗ…ಮತ್ತು ಕರುಣೆ… ********************************************************** .

ಕಾಗೆ… Read Post »

ಅಂಕಣ ಸಂಗಾತಿ, ರಂಗ ರಂಗೋಲಿ

ಅಂಕಣ ಬರಹ-01 ನಾಂದಿ ಪದ್ಯ ತೆಂಗಿನ ಮಡಲಿನಿಂದ ನೇಯ್ದ ತಟ್ಟಿ ಆ ಮನೆಯ ಹೊರ ಆವರಣದ ತಡೆ ಗೋಡೆ. ಮಣ್ಣಿನ ನೆಲಕ್ಕೆ ಮಣ್ಣಿನದ್ದೇ ಪರಿಮಳ. ಮಳೆಗಾಲದಲ್ಲಿ ಆ ಮನೆಯ ನೆಲವು ನೀರ ಒಸರಿಗೆ ಹಸಿ ಹಸಿಯಾಗುತ್ತದೆ. ಹೊರಗೆ ಧೋ ಎನ್ನುವ, ಹನಿಹನಿ ಟಪಟಪ ಹನಿಸಿ ಮರ್ಮರಿಸುವ, ಗುನುಗುವ, ಆರ್ಭಟಿಸುವ ಹಠಮಾರಿ ಮಳೆ.  ಚಾಪೆಯಂತೆ ಹೆಣೆದ ಆ ತಟ್ಟಿಯನ್ನು ನನ್ನ ಪುಟ್ಟ ಬೆರಳಿನಲ್ಲಿ ಅಗಲಿಸಿ ಒಂದು ಕಣ್ಣನ್ನು ಆ ಖಾಲಿಗೆ ಹೊಂದಿಸಿ..ಇನ್ನೊಂದು ಕಣ್ಣ ಮುಚ್ಚಿ ಹೊರಗೆ  ಸುಯ್ಯುತ್ತಿದ್ದ ಮಳೆಯೊಂದಿಗೆ ಮುಗ್ಧ ಮನಸ್ಸಿನ ಅವ್ಯಕ್ತ ಅನುಸಂಧಾನ ನಡೆಯುತ್ತಿತ್ತು. ಎದೆಗೆ ಹೊಯ್ಯತ್ತಿದ್ದ ಭಾವಗಳಿಗೆ ಅಕ್ಷರದ ರೂಪವಿಲ್ಲ. ಆದರೆ ಕಣ್ಣುಗಳಲ್ಲಿ ಚುಕ್ಕಿಗಳ ಹೊಳಪು. ಸ್ಪಷ್ಟವಾಗದ ಅವರ್ಣನೀಯ ಮಾತುಗಳು ಗಿರಕಿ ಹೊಡೆಯುತ್ತಿದ್ದವು. ಅದೇ ಭಾವವನ್ನು ಹೊತ್ತು ಮುಖ ತಿರುಗಿಸುತ್ತಿದ್ದೆ. ಮಗ್ಗದ ಸೀರೆ ಉಟ್ಟ, ಉದ್ದದ ಮೂಗುತಿ, ನತ್ತು ಮೂಗಿಗೇರಿಸಿಕೊಂಡು, ಹಣೆಯಲ್ಲಿ ದೊಡ್ಡದಾಗಿ  ಹುಣ್ಣಿಮೆಯ ಚಂದ್ರನಂತ ಕುಂಕುಮ ತಂಪಾಗಿ ನಗುತ್ತಿದ್ದರೆ ..ಅದರದೇ ಬೆಳಕು ಹೊದ್ದಂತೆ ಕಣ್ಣು ಮುಖದಲ್ಲಿ ಮಿಂಚಿನಂತಹ ಬೆಳಕು ಹಾರಿಸಿ ಎದುರಿನ ಕೆಳತುಟಿ ಕಚ್ಚಿ ಕೂತ ಎರಡು ಹಲ್ಲು ಬಿಡುತ್ತಿದ್ದಳು ನನ್ನಜ್ಜಿ.   ನಾನು ಮತ್ತೆ ಕಣ್ಣನ್ನು ಹೊರಗಿನ ಮಳೆಗೆ ಸಿಲುಕಿಸುತ್ತಿದ್ದೆ.  “ಇನ್ನು ಸ್ವಲ್ಪ ದಿನ ಆಮೇಲೆ ಆಟ ಶುರು..ಈ ಮಳೆ ನಿಲ್ಲುತ್ತಲೇ ಒಂದೊಂದೇ ಮೇಳ ಹೊರಡಲು ಶುರುವಾಗುತ್ತದೆ”. ಒಂದೇ ನೆಗೆತಕ್ಕೆ ಆಕೆಯ ತೆಕ್ಕೆಗೆ ಜೋತು ಬೀಳುತ್ತಿದ್ದೆ. ಮಳೆಯ ಸದ್ದಿನಾಚೆ ಅದನ್ನೂ ಮೀರಿಸುವಂತೆ ಚಂಡೆಯ ಸದ್ದು ಕಿವಿಯೊಳಗೆ ಅನುರಣಿಸಿದಂತೆ ತೊನೆಯುತ್ತಿದ್ದೆ. ಬಣ್ಣಬಣ್ಣದ ವಸ್ತೃ, ಕಿರೀಟ. ಅಬ್ಬಾ!ಆ ಶಕರನ ಮುಖ, ತೆರೆದುಕೊಂಡ ಕಣ್ಣು. ಅದರ ಸುತ್ತ.ಬಣ್ಣದ ರೇಖೆಗಳು. ಅದು ರಾಕ್ಷಸ ವೇಷ.  ಎದೆಯಲ್ಲಿ ಬಂದು ಕೂತ ಉರೂಟು ಭಯ..ಶಕಾರ ಎದ್ದ.  ಹೋಓಓಓಒ…ಥೈ ಥೈಥೈ…  “ಎಲ್ಲೀ…ಆ ವಶಂತ ಶೇನೆ”  ದೇಹದೊಳಗೆ ತುಂಬಿಕೊಳ್ಳುವ ಅದು ಯಾವುದೋ ಆವೇಶ. ನಾಯಿ ಓಡಿಸಲು ಮೂಲೆಯಲ್ಲಿ ಕೂತ ಕೋಲು ಬಿಲ್ಲು ಬಾಣವಾಗಿ ಮನಸಿನೊಳಗಿನ ಆ ಪುರುಷಾಕೃತಿ ಮುಖಕ್ಕೆ ಕಟ್ಟಿದ ಕಂಗಿನ ಹಾಳೆಯ ತುಂಡಿನ ಮುಖವಾಡದಿಂದ ಅನಾವರಣಗೊಳ್ಳುತ್ತಿತ್ತು. ನನ್ನ ಪುಟ್ಟ ದೇಹವನ್ನು ತನ್ನ ಆಧೀನಕ್ಕೆ ತಂದು ಕುಣಿಸುತ್ತಿತ್ತು.  “ಶಕರ” ಹೂಂಕರಿಸುತ್ತಿದ್ದ.  “ಹ್ಹೇ…ವಶಂತಶೇನೆ..ಎಲ್ಲಿರುವೆ. ಬಂದೆ ನಾನು… “ ಕೇವಲ ಎರಡು ಹಲ್ಲಿನ ಬೊಜ್ಜುಬಾಯಿ ಅಗಲಿಸಿ ಈ ಸೂತ್ರಧಾರಿ ನನ್ನಜ್ಜಿ ನಗುತ್ತಿದ್ದಳು…ನಗು ನಗು.. ” ಅಬ್ಬಬ್ಬಾ..ಈ ಶಕರನ ಧಾಳಿ ತಡಕೊಳ್ಳುವುದು ಕಷ್ಟ. ಏ.. ನಿಲ್ಲಿಸು..ನಿನ್ನ ವಶಂತ..ಶೇನೆ ಬರುತ್ತಾಳೆ..ಇಲ್ಲದಿದ್ರೆ ಈಗ ಕೋಲು ಬರ್ತದೆ.” ಮತ್ತೆ ನಗು. ಆ ನಗುವಿನಿಂದ ಮತ್ತಷ್ಟು ಹುಮ್ಮಸ್ಸು ಏರಿ ತೆಂಗಿನ ಕಾಯಿಯ ತುದಿ ಸಿಪ್ಪೆ ಸಮೇತ  ( ಅದು ವಸಂತಸೇನೆಯ ಮುಡಿ) ಹಿಡಿದು ಎಳೆತರುತ್ತಿದ್ದೆ. ಕುಣಿತ..ಸುತ್ತುಸುತ್ತಿ ಸುತ್ತಿ ಗಿರ್ ಗಿಟಿ ಹಾಕಿ ಒದ್ದೆ ನೆಲದಲ್ಲಿ ಕುಸಿಯುತ್ತಿದ್ದೆ. ನನ್ನೊಳಗೆ ಚಂಡೆಯ ಅಬ್ಬರ  ಏರುತ್ತಲೇ ಇತ್ತು.  ವಸಂತಸೇನೆ ಆರ್ತಳಾಗಿ ಅಜ್ಜಿಯತ್ತ ನೋಡುವಂತೆ ಭಾಸವಾಗುತ್ತಿತ್ತು.  “ರಕ್ಷಿಸಿ..ಎಲ್ಲಿ ನನ್ನ ಚಾರುದತ್ತ..” “ತರ್ತೇನೆ ಈಗ ಕೋಲು..ನಿನ್ನ ಪಾಠ ಪುಸ್ತಕ ಎಲ್ಲುಂಟು. ಅದು ಚೀಲದಿಂದ ಹೊರ ಬರಲಿಕ್ಕೆ ಉಂಟಾ.. ಆಟದ ಸುದ್ದಿ ತೆಗೆದದ್ದೇ ದೊಡ್ಡ ತಪ್ಪಾಯ್ತು. ನೋಡ್ತೇನೆ ನಿನ್ನ ಮಾರ್ಕು.ಕುಂಡೆಗೆ ಬಿಸಿ ಬರೆ ಹಾಕಲಿಕ್ಕುಂಟು..ಆಮೇಲೆ ಶಕಾರ,ವಸಂತಸೇನೆ.” ಅವಳ ಜೋರು ಕಿವಿಯ ಬದಿಯಿಂದ ಹಾದುಹೋದರೆ ಒಳಗಿಳಿದು ಸದ್ದು ಮಾಡುವುದು ಯಕ್ಷಗಾನದ ಆ ಪಾತ್ರಗಳು. ಶುರುವಾಗುತ್ತಿತ್ತು. ಪುಟ್ಟ ಮನಸ್ಸಿನೊಳಗೆ ರಂಗಿನಾಟ..ಬಣ್ಣ ಗಾಢವಾಗುತ್ತಲೇ ಹೋಗುತ್ತಿತ್ತು. ಕಲ್ಪನಾಲೋಕದೊಳಗಿನ ಒಡ್ಡೋಲಗ. ರಾಜ, ರಾಣಿ ರಾಜಕುಮಾರ, ರಾಕ್ಷಸ  ಅವತರಿಸಿ ನನ್ನಲ್ಲಿ ನಶೆ ಏರಿಸುತ್ತಿದ್ದ ಪರಿ.  ಹನಿದ ಮಳೆ ಕ್ಷೀಣವಾಗುತ್ತಾ,ಆಗುತ್ತಾ, ಮಾಯಾ ಲೋಕದೆಡೆಗೆ ಸರಿದು ಹೋದರೆ..ಬಿಳಿಬಿಳಿ ಚಳಿ ಧರೆಗಿಳಿಯುತ್ತಿತ್ತು. ಪೆಟ್ಟಿಗೆ ಸೇರಿದ್ದ ಪುರಾಣದ ಪಾತ್ರಗಳ ರಂಗಸಜ್ಜಿಕೆ ಮೈ ಕೊಡವಿ ಎದ್ದು..ಮೇಳಗಳು ಸಂಚಾರಕ್ಕೆ ಹೊರಡುತ್ತಿದ್ದವು.  ಇರುಳು ಕವಿಯುತ್ತಲೇ ಯುಗ ಬದಲಾಗಿ ತ್ರೇತಾ ,ದ್ವಾಪರ ತೆರೆದುಕೊಂಡು ರಾಮ,ಕೃಷ್ಣ ಎಲ್ಲರೂ ಧರೆಗಿಳಿಯುತ್ತಿದ್ದರು. ಅಜ್ಜಿಯ ಸೊಂಟದಲ್ಲಿ ಕೂತು ಆರಂಭವಾದ ನನ್ನ ಅವಳ ಈ ಯಕ್ಷಲೋಕದೆಡೆಗಿನ ಪಯಣ ಅವಳ ಕೈ ಹಿಡಿದು ನಾನು ನಡೆಸುವವರೆಗೂ ಸಾಗಿತ್ತು.  ರಾತ್ರಿ ಬಯಲಾಟದ ವೀಕ್ಷಣೆ.. ಹಗಲಿಗೆ ಅರೆಮಂಪರಿನಲ್ಲಿ ಒಳಗಡೆಯ ಚಂಡೆಯ ಸದ್ದಿಗೆ ಸಿಕ್ಕಿದ ಕೋಲು ಹಿಡಿದು ಕುಣಿತ..ಅಮ್ಮನ ಹಳೆಯ ಸೀರೆ ತುಂಡು, ಸೋದರ ಮಾವನ ಲುಂಗಿಗಳು..ಒಡ್ಡೋಲಗದ ಪರದೆ, ಬಗೆಬಗೆಯ ವಸ್ತ್ರಗಳಾಗಿ ಕಲ್ಪನಾಲೋಕದ ಭ್ರಮರವು ಮನಸೋ ಇಚ್ಛೆ ಹಾರುತ್ತಲೇ ಇತ್ತು. ಶಾಲೆಗೆ ಹೋಗಿ ಕೂತರೂ ವೇಷ ಎದುರುಬಂದಂತೆ.. “ಬಂದಳು..ಚೆಲು..ವೆ ಚಿತ್ರಾಂಗದೆ.”  ಅದೆಷ್ಟು ಹೊಸ ಹೊಸ ಪಾತ್ರಗಳು ಮನಃಪಟಲದಲ್ಲಿ ಅರಳಿ ನಾನೇ ಅದಾಗಿ ರೂಪುಗೊಳ್ಳುವ ಚೆಂದವೆಂತಹುದು…ಆಹಾ..ನನಗೋ ಅವರನ್ನು ಅಲ್ಲಿಂದ ಬಿಡುಗಡೆಗೊಳಿಸಿ ಹೊರತರಬೇಕಾದ ತುರ್ತು. ಪಕ್ಕದಲ್ಲಿ ಕೂತ ಗೆಳತಿಯರಿಗೆ ಸ್ಲೇಟಿನಲ್ಲಿ ಟೀಚರ್ ಕೊಟ್ಟ ಲೆಕ್ಕ ಬಿಡಿಸಿ, ಮಗ್ಗಿ ಬರೆದು ಆಮಿಷ ಹುಟ್ಟಿಸುತ್ತಿದ್ದೆ. ಆಮೇಲೆ ನಾನು ಕಥೆ ಹೇಳುವುದನ್ನು ನೀನು ಕೇಳಬೇಕು. ಮನೆಗೆ ಓಡಬಾರದು ಹೀಗೆ ಹಲವು ಒಳ ಒಪ್ಪಂದಗಳು. ಹೊಸ ಹೊಸ ಪಾತ್ರಗಳು ನನ್ನಲ್ಲಿ ಬಣ್ಣ ಹಚ್ಚಿಕೊಳ್ಳುತ್ತಿದ್ದವು. ರಾತ್ರಿ ಎದೆಗಿಳಿದ ಅವುಗಳ ಮಾತುಗಳು ಚೂರು ಪಾರು ಮಾರ್ಪಾಡು ಹೊಂದಿ ಬಣ್ಣದ ಚಿತ್ತಾರದ ಗ್ಲಾಸಿನಲ್ಲಿ ತುಂಬಿದ ಶರಭತ್ತಿನ ರುಚಿಯಂತೆ ವ್ಯಕ್ತವಾಗುತ್ತಿದ್ದವು. ಮತ್ತೆ ಆ ಪಾತ್ರಗಳಿಗೆ  ಹೆಸರು ಹುಡುಕುವ ಪರದಾಟ.  ಸೌದಾಮಿನಿ, ಧಾರಿಣಿ, ಮೈತ್ರೇಯಿ, ವೈದೇಹಿ..ಎಲ್ಲರೂ ಬಿಂಕ ಲಾಸ್ಯದಿಂದ ಗೆಜ್ಜೆ ಕಟ್ಟಿ ಮನೆ ಕದ ತೆರೆದು ಹೊರಗಡೆ ಹಾರುತ್ತಿದ್ದರು.  ಅದೊಂದು ಅದ್ಭುತ ಲೋಕ. ಅರಿವಿನ ಜಗತ್ತು ಮೊಳಕೆಗೊಳ್ಳುವ ಮುನ್ನವೇ ಅಜ್ಜಿಯೆಂಬ ಅಚ್ಚರಿಯ ಮಾಂತ್ರಿಕಳು ನನ್ನೊಳಗೆ ಕಲ್ಪನೆಯ ಪ್ರಪಂಚ ತೆರೆದು ತೋರಿಸಿ ನನ್ನನ್ನು ಅಲ್ಲಿ ಕೂರಿಸಿದ್ದಳು. ತನ್ನ ಚಿರಿಟಿ ಹೋದಂತಹ ಸೊಂಟದಲ್ಲಿ ನನ್ನ ಕೂರಿಸಿ ಥಂಡಿ ಗಾಳಿಯ ಒರೆಸುತ್ತ ದೇವಾಲಯದ ಎದುರಿನ ಗದ್ದೆ, ಶಾಲೆಯ ಎದುರಿನ ಬಯಲು, ಯಾರದೋ ಮನೆಯಂಗಳದಲ್ಲಿ ನಡೆವ ಹರಕೆಯ ಬಯಲಾಟ ಒಂದನ್ನೂ ಬಿಡದೆ ರಾತ್ರಿ ತೆಂಗಿನೆಣ್ಣೆ, ಉಪ್ಪು ಬೆರೆಸಿದ ಕುಚುಲಕ್ಕಿ ಗಂಜಿ ಉಣಿಸಿ ಕಂಡೊಯ್ಯುತ್ತಿದ್ದಳು. ಅಲ್ಲೇ ಆ ಮಣ್ಣಿನ ನೆಲದಲ್ಲಿ  ಕಣ್ಣು ಬಾಯಿ ಕಿವಿ,ಮೂಗು, ಮೈಯೆಲ್ಲ ಅರಳಿಸಿ ಕೂತು ಆಟ ನೋಡುತ್ತಿದ್ದೆ. ಈ ಜಗದ ತಂತು ಕಡಿದು ಅಲ್ಲೆಲ್ಲೋ ಸೇರಿದಂತೆ..ಎಂತಹ ವಿಸ್ಮಯ ಪ್ರಪಂಚವದು. ದೇವತೆಗಳು ಬರುತ್ತಿದ್ದರು. ಸುಂದರ ಉದ್ಯಾನವನ, ಅತಿ ಸುಂದರ ರಾಜಕುಮಾರಿ, ಆ ರಾಜ..ಈ ರಾಕ್ಷಸ.. ಮತ್ತೆ ಯುದ್ದ..ಆರ್ಭಟ. ಅತ್ಯಂತ ಮನೋಜ್ಞವಾಗಿ, ಚಾಕಚಕ್ಕತೆಯಿಂದ ,ಕೌಶಲ್ಯದ  ಮಾತುಗಳ ಕೊಂಡಿಗಳು ಕ್ಕೋ ಕೊಟ್ಟಂತೆ,ಅರಳು ಅರಳಿದಂತೆ ಹರಡಿಕೊಳ್ಳುತ್ತಿದ್ದವು.  ರಾಜಕುಮಾರಿಯ ಜೊತೆಗಿನ  ಸಖಿಯಾಗಿ, ಆ ರಾಜಕುಮಾರಿಯೇ ನಾನಾಗಿ ಅಲೆದಾಟ,ನಗು,ಅಳು, ವಿರಹದ ಅರ್ಥವೇ ಇಣುಕದ ವಯಸ್ಸಿನಲ್ಲಿ ವಿರಹ ಶೃಂಗಾರ ಎಲ್ಲವೂ ತಣ್ಣಗೆ ಮುಗ್ಧ ಮನಸ್ಸಿನ ಒಳಗಿಳಿಯುತ್ತಿತ್ತು. ಆಗೆಲ್ಲ ರಾಮಾಯಣ, ಮಹಾಭಾರತದ ಕಥೆಗಳು ಹಾಗೂ ಅಲ್ಲಿ ಸಿಗುವ ಉಪಕಥೆಗಳು ಬಯಲಾಟದ ಪ್ರಸಂಗಗಳಾಗಿರುತ್ತಿದ್ದವು. ಭಕ್ತಿಪ್ರಧಾನ,ನೀತಿಭೋದಕ ಕಥೆಗಳು. ಇಂತಹ ಸಂದರ್ಭದಲ್ಲೇ ಆ ಪುಟ್ಟ ವಯಸ್ಸಿನಲ್ಲಿ ನೋಡಿದ ವಸಂತಸೇನೆ ಎಂಬ ಪ್ರಸಂಗ ಬಹಳ ಆಳಕ್ಕಿಳಿದು ನನ್ನ ಕುಣಿಸುತ್ತಿತ್ತು. ನಿಜವೆಂದರೆ ನಂತರದ ದಿನಗಳಲ್ಲಿ ಕಥೆ ಮಾಸಿದರೂ, ಅದರಲ್ಲಿ ಬರುವ ವಸಂತಸೇನೆಯ ಪ್ರೀತಿ ಹಾಗೂ ಖಳನಾಯಕ ಶಕರನ  ಗಟ್ಟಿ ಸೀಳುಧ್ವನಿಯ ಮಾತು ಉಳಿದುಬಿಟ್ಟಿತು. ಶಕರ ಬಂದ ಎಂದರೆ ಹೆದರಿಬಿಡುತ್ತಿದ್ದೆ. ಮತ್ತೆ ನಾನೇ ಶಕರನಾಗಿ ಕುಣಿಕುಣಿದು.. ‘ಎಲ್ಲಿ ಆ ವಶಂತ ಶೇನೆ ‘ ಎನ್ನುತ ಅದೇ ಶೈಲಿಯಲ್ಲಿ ದೊಡ್ಡ ಹೆಜ್ಜೆ ಇರಿಸಿ ಸಂಭ್ರಮಿಸುತ್ತಿದ್ದೆ. ಹಗಲಲ್ಲಿ ಶಕರನಾಗಿ ಬದಲಾಗುವ ನಾನು ರಾತ್ರಿ ಊಟದ ಸಮಯ ಬಂದು ಶಕರ ಎಂದರೆ ಹೆದರಿ ಗಬಗಬ ಉಣ್ಣುತ್ತಿದ್ದೆ. ರಾತ್ರೆಯಾದರೆ ನಾನು ಥೇಟು ವಸಂತಸೇನೆ!. ರಂಗ ಏರುವ ಆಸೆ,ನಶೆ..ತೀರದ ಹುಚ್ಚಿಗೆ ಈ ಬಯಲಾಟಗಳೇ ಮೊದಲ ಸಜ್ಜಿಕೆ. ನಿಂತಲ್ಲಿ,  ಕೂತಲ್ಲಿ ಶಕರ, ವಸಂತಸೇನೆ, ಶ್ವೇತಕುಮಾರ, ದ್ರೌಪದಿ, ದಮಯಂತಿ,..ಸಾಲು ಸಾಲು ಪಾತ್ರಗಳು  ನನ್ನನ್ನು ಗಟ್ಟಿಯಾಗಿ ಆವರಿಸಿಕೊಳ್ಳತೊಡಗಿದವು. ಎಲ್ಲೋ ಒಂದಿನಿತು ಮರೆಗೆ ಹೋಗಲು ಯತ್ನಿಸಿದರೆ ಈ ಜಾದೂಗಾರಿಣಿ ಅಜ್ಜಿ‌ ಮತ್ತೆ ಮತ್ತೆ ತುತ್ತು ಇಡುವಾಗ, ತಲೆಗೆ ನೀರು ಹೊಯ್ಯುವಾಗ, ಎಣ್ಣೆಯಿಟ್ಟು ಜಡೆ ಹೆಣೆಯುವಾಗ, ಬೇಸರದ ಕ್ಷಣಗಳಲ್ಲಿ ಮುದ್ದಿಸುವಾಗ ಕಥೆಯ ಮಾಲೆ ಹೊರತೆಗೆದು ಒಂದೊಂದಾಗಿ ಬಿಡಿಸುತ್ತಿದ್ದಳು. ಓಹ್..ಎಂತಹ ಶ್ರೀಮಂತ ದಿನಗಳವು. ಆ ದಿನಗಳು ನನ್ನ ನಾಟಕ ಬದುಕಿನ ಮೊದಲ ಪುಟಗಳು ಅನ್ನಲೇ,ಅಥವಾ ಮುನ್ನುಡಿ ಬರಹ ಅನ್ನಲೇ. ************************************************************************ ರಂಗಭೂಮಿ ಹಾಗೂ ಕಿರುತೆರೆ ಕಲಾವಿದೆ.ಕವಯತ್ರಿ. ಕನ್ನಡ,ತುಳು,ಕೊಂಕಣಿ ಭಾಷೆ ಯ ಸಿನೇಮಾಗಳಲ್ಲಿ ಅಭಿನಯ. ಕೊಂಕಣಿ ಸಿನೇಮಾ ” ಅಂತು” ವಿನ ಅಭಿನಯಕ್ಕೆ ರಾಷ್ಟ್ರಮಟ್ಟದ Hyssa Cini Global Award Best supporting actor ದೊರಕಿದೆ. ” ಸಿರಿ” ಏಕವ್ಯಕ್ತಿ ಪ್ರಸ್ತುತಿ 29 ಯಶಸ್ವೀ ಪ್ರದರ್ಶನ ಕಂಡಿದೆ.ಮಂಗಳೂರು ವಿಶ್ವವಿದ್ಯಾನಿಲಯದ ಕೊಂಕಣಿ ಅಧ್ಯಯನ ಪೀಠದ ಸದಸ್ಯೆ. ಪ್ರಸ್ತುತ ರಾಜ್ಯ ಕೊಂಕಣಿ ಸಾಹಿತ್ಯ ಅಕಾಡಮಿ ಸದಸ್ಯೆ. “ಅಮೋಘ ಎಂಬ ಸಂಸ್ಥೆ ಹುಟ್ಟುಹಾಕಿ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ. ಆಕಾಶವಾಣಿ ಕಲಾವಿದೆ.ಇದುವರೆಗೆ 3 ಕವನ ಸಂಕಲನ ಸೇರಿದಂತೆ 6 ಪುಸ್ತಕಗಳು ಪ್ರಕಟಗೊಂಡಿವೆ. GSS ಕಾವ್ಯ ಪ್ರಶಸ್ತಿ,ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ,GS Max ಸಾಹಿತ್ಯ ಪ್ರಶಸ್ತಿ. ಹಲವಾರು ಕವಿಗೋಷ್ಠಿಯಲ್ಲಿ ಭಾಗವಹಿಸುವಿಕೆ.

Read Post »

ಅನುವಾದ

ಹೃದಯ ಭಾಷೆ

ಅನುವಾದಿತ ಕಥೆ ಹೃದಯ ಭಾಷೆ ತೆಲುಗು ಮೂಲ: ಕಳ್ಳೆ ವೆಂಕಟೇಶ್ವರ ಶಾಸ್ತ್ರಿ                               ಕನ್ನಡಕ್ಕೆ: ಚಂದಕಚರ್ಲ ರಮೇಶ ಬಾಬು ಬೆಳೆಗ್ಗೆ ಐದು ಗಂಟೆಗೆ ಆತ ತನ್ನ ಫ್ಲಾಟಿನಿಂದ ಹೊರಗಡೆ ಬಂದ. ಆತನ ಫ್ಲಾಟ್ ತುಂಬಾ ಚಿಕ್ಕದು. ಗ್ರೌಂಡ್ ಫ್ಲೋರ್ ನಲ್ಲಿತ್ತು. ಒಂದು ಹಾಲು, ಒಂದು ಮಲಗುವ ಕೋಣೆ, ಅಡುಗೆಮನೆ, ಬಾತ್ರೂಮ್ ಕಮ್ ಟಾಯ್ಲೆಟ್ ಇವು ಅದರ ಭಾಗಗಳು. ಬಾಗಿಲು ಮುಚ್ಚಿ, ಚಿಲಕವಿಟ್ಟು ಅದಕ್ಕೆ ಬೀಗ ಹಾಕಿದ. ಹೊರಗಡೆ ಇನ್ನೂ ಕತ್ತಲಿತ್ತು. ಬೆತ್ತದ ಆಸರೆಯಿಂದ ಸದ್ದಿಲ್ಲದೇ ಬೇಗಬೇಗ ನಡೆಯುತ್ತಿದ್ದ. ಆತನ ಹೆಗಲಿಗೆ ಕ್ಯಾನ್ವಾಸಿನ ಹೆಗಲು ಚೀಲ ನೇತಾಡುತ್ತಿತ್ತು. ಆತನ ಹೆಸರೇನು ಅಂತ ಅಲ್ಲಿರುವವರಿಗೆ ಗೊತ್ತಿರಲಿಲ್ಲ. ಆ ಫ್ಲಾಟ್ ಆತನ ಸ್ವಂತದ್ದೇ. ಹಾಗಾದರೇ, ಆತನನ್ನು ಏನಂತ ಕರೆಯುತ್ತಾರೆ ? ಆತನನ್ನು ಯಾರೂ ಕರೆಯುವುದಿಲ್ಲ. ಇನ್ನೂ ಹೇಳಬೇಕಾದರೆ ಆತನ ಬಗ್ಗೆ ಯಾರೂ ಚರ್ಚಿಸುವುದಿಲ್ಲ. ಇನ್ನುವರೆಗೂ ಆತನನ್ನು ಕರೆಯುವ ಅಗತ್ಯವೇ ಬಿದ್ದಿರಲಿಲ್ಲ ಅಲ್ಲಿ ವಾಸಿಸುವವರಿಗೆ. ಆತನ ವಯಸ್ಸು ಹೆಚ್ಚುಕಡಿಮೆ ಅರವತ್ತು ದಾಟಿ ಎಪ್ಪತ್ತರ ಒಳಗೆ ಇರಬಹುದು. ಆ ವಯಸ್ಸಿಗೆ ತಕ್ಕ ಹಾಗೆ, ಅತಿ ಸಾಧಾರಣವಾಗೇ ಇರುತ್ತಾನೆ ಆತ. ಆದರೇ…. ಯಾವಾಗಲೂ ಒಂದೇ ತರ ಇರುವುದಿಲ್ಲ . ಸ್ವಲ್ಪ ದಿವಸ ಮೀಸೆ ಇಟ್ಟಿದ್ದರೆ, ಮತ್ತೆ ಕೆಲದಿನ ತೆಗೆದಿರುತ್ತಾನೆ. ಒಂದು ದಿನ ಬೋಳಉತಲೆಯೊಂದಿಗೆ ಪ್ರತ್ಯಕ್ಷವಾದರೆ, ಮತ್ತೆ ಕೆಲ ದಿನ ಉದ್ದ ಕೂದಲಿನ ಸಾಧುವಿನ ತರ ಕಾಣಿಸಿಕೊಳ್ಳುತ್ತಾನೆ. ಆತನ ದಿರಿಸು ಬಹು ವಿಚಿತ್ರ. ಪೈಜಾಮಾ, ಜುಬ್ಬಾ ಧರಿಸಿದ್ದು, ತಲೆಗೆ ವಿದೇಶೀ ಟೋಪಿ ಇಡುತ್ತಾನೆ. ಒಮ್ಮೊಮ್ಮೆ ಪಂಚೆ ಉಟ್ಟು, ಮೇಲೆ ಶಲ್ಯ ಹಾಕಿ ತಿರುಗುತ್ತಾನೆ. ಮತ್ತೊಮ್ಮೆ ಯಾವುದೋ ನಾಮ ಹಣೆಯಮೇಲೆ ಧರಿಸಿರುತ್ತಾನೆ. ಸರಿ….. ಈಗ ಆತ ಎತ್ತ ಹೋಗುತ್ತಿದ್ದಾನೆ ? ನೇರ ಪಾರ್ಕಿನ ಕಡೆಗೆ ಹೋಗುತ್ತಿದ್ದಾನೆ. ಆ ದಾರಿಯಲ್ಲಿ ಆತನನ್ನು ನೋಡಿ ಬೊಗಳಲು ನಾಯಿಗಳಿಲ್ಲ. ಎಲ್ಲವನ್ನು ಮುನಿಸಿಪಾಲಿಟಿಯವರು ಎಲ್ಲೋ ಸಾಗಿಸಿದ್ದಾರೆ. ಆದರೆ ಅದು ಆತನ ದೂರುಗಳಿಂದಲೇ ಆದದ್ದು ಎಂದು ಅವರಿಗೆ ಗೊತ್ತಿಲ್ಲ. ಇದೋ…. ದಿನಾ ಬೆಳಗ್ಗೆ ಪತ್ರಿಕೆ ಹಾಕುವ ಹುಡುಗರು ವೇಗವಾಗಿ ಸೈಕಲ್ ತುಳಿಯುತ್ತ ಬರುತ್ತಿದ್ದಾರೆ. “ ಇವರುಗಳೆಲ್ಲ ಕನ್ನಡಿಗಳನ್ನು ತೊಗೊಂಡು ಹೋಗುತ್ತಿದ್ದಾರೆ. ಕನ್ನಡಿಯೊಳಗೆ ನೋಡಿಕೊಳ್ಳದಿದ್ದರೆ ಜನರಿಗೆ ಏನೂ ಅರ್ಥವಾಗುವುದಿಲ್ಲ, ಪಾಪ “ ಅಂದುಕೊಂಡ ಆತ. ಆತ ಅಷ್ಟೇ….. ದಿನಪತ್ರಿಕೆಯನ್ನು ’ ಕನ್ನಡಿ’ ಅಂತ ಕರೆಯುತ್ತಾನೆ. ಜನಗಳ ಮನೋಭಾವಗಳಿಗೆ ಕನ್ನಡಿ ಹಿಡಿಯುವುದು ಮತ್ತು ಜಗತ್ತಿನಲ್ಲಿ ನಡೆಯುವ ವಿಚಿತ್ರ ಘಟನೆಗಳನ್ನು ಕನ್ನಡಿಯಂತೆ ತೋರಿಸುವುದು ದಿನಪತ್ರಿಕೆಗಳೇ ಆದ ಕಾರಣ ಆತ ಅವುಗಳಿಗೆ ಆ ಹೆಸರು ಇಟ್ಟುಕೊಂಡಿದ್ದಾನೆ. ಆತನ ವ್ಯವಹಾರವೇ ಅಷ್ಟು ! ಎಲ್ಲಾ ಸಂಕೇತ ಭಾಷೆಯಲ್ಲಿರುತ್ತೆ. ಆತ ಬರೆದಿಟ್ಟುಕೊಳ್ಳುವ ದಿನಚರಿ ಸಹ ಅದೇ ಭಾಷೆಯಲ್ಲಿರುತ್ತದೆ. ಈ ಅಭ್ಯಾಸ ಆತನಿಗೆ ಹೇಗೆ ಬಂತೋ ಯಾರಿಗೂ ಗೊತ್ತಿಲ್ಲ. ಆತ ಸಂದಿಗಳಲ್ಲಿ ನಡೆಯುವುದಿಲ್ಲ. ಮುಖ್ಯರಸ್ತೆಯ ಮೇಲೇನೇ. ಅದೂ ಸಹ ಮಾರ್ನಿಂಗ್ ವಾಕ್ ಮತ್ತು ಜಾಗಿಂಗ್ ಗಳ ಸಮ್ಮಿಶ್ರಣವಾಗಿರುತ್ತೆ. ಆತ ಹೀಗೆ ಎಷ್ಟು ದಿನಳಿಂದ ಅಥವಾ ಎಷ್ಟು ವರ್ಷಗಳಿಂದ ಮಾಡುತ್ತಿದ್ದಾನೋ ಯಾರಿಗೂ ಗೊತ್ತಿಲ್ಲ. ಇದೀಗ ಆ ಮಸೀದಿ ಪಕ್ಕದ ಮುಖ್ಯರಸ್ತೆಯ ಮೇಲಿನ ಕಾಫೀ ಹೋಟಲ್ ತೆಗೀತಿದ್ದಾರೆ. ಅದೋ ತೆಗೆದರು…..! “ ಹೌದು. ಕಷಾಯ ಕುಡಿದು ತುಂಬಾ ದಿನ ಆಯ್ತು. ನಡಿ. ಅಂತರಾತ್ಮಕ್ಕೆ ಹೋಗಿ ಸ್ವಲ್ಪ ಗಂಟಲಿಗೆ ಹಾಕೋಣ.” ಅಂತ ಹೇಳಿತು ಅವನ ಒಳ ಮನಸ್ಸು. ಅಂತರಾತ್ಮ… ಇದು ಆತ ಹೊಟೆಲಿಗೆ ಇಟ್ಟುಕೊಂಡ ಹೆಸರು….. ಅದರಲ್ಲಿ ಹೋಗಿ ಕೂತ. ಮಾಣಿ ಬಂದ ತಕ್ಷಣ “ ಕಷಾಯ” ಅಂದ. ಅವನಿಗೆ ಕನ್ನಡ ಬರುವುದಿಲ್ಲ. ಏನು ? ಎನ್ನುವ ಹಾಗೆ ಕೈಯಿಂದ ಸನ್ನೆ ಮಾಡ್ದ. ಆತ ಗೋಡೆಯ ಮೇಲಿದ್ದ ಪದಾರ್ಥಗಳ ಪಟ್ಟಿಯ ಬಳಿಗೆ ಹೋಗಿ ಕಾಫಿ ಅಂತ ಇದ್ದ ಕಡೆಗೆ ಬೆಟ್ಟು ಮಾಡಿ ತೋರಿಸಿದ. “ ಓಹೋ ! ಕಾಫೀ ಕ್ಯಾ….” ಅಂತ ತನ್ನಲ್ಲೇ ನಗೆಯಾಡುತ್ತ ಹೋದ ಅವನು. ಕಾಫಿ ಕುಡಿದ ಮೇಲೆ “ ಕವಡೆ ” ಕೊಟ್ಟು ಹೊರಬಂದ. ಕವಡೆ ಎಂದರೆ ದುಡ್ಡು… ಕಿಸೆಯಲ್ಲಿ ಕವಡೆ ಕಾಸಿಲ್ಲ ಅಂತಾರಲ್ಲ…. ಅದಕ್ಕೆ ದುಡ್ಡಿಗೆ ಕವಡೆ ಅಂತ ಹೆಸರಿಟ್ಟುಕೊಂಡಿದ್ದಾನೆ ಆತ. ಮತ್ತೆ ನಡೆಯಲು ಮೊದಲಿಟ್ಟ .  ಕೆಲ ಯುವಕರು ಟೀ ಷರ್ಟ್ ಮತ್ತು ಷಾರ್ಟ್ ಧರಿಸಿ ಜಾಗಿಂಗ್ ಗೆ ಬರುತ್ತಿದ್ದರು. ತನ್ನಲ್ಲೇ ನಕ್ಕ ಆತ. ಯಾಕೆ ಅಂತ ಅವನಿಗೂ ಗೊತ್ತಿಲ್ಲ. ಬಹುಶಃ ಒಂದು ಕಾಲದಲ್ಲಿ ತಾನು ಸಹ ಇದೇ ರೀತಿ ಯೌವನದಲ್ಲಿ ತುಂಬಿ ತುಳುಕುತ್ತಾ ಹೋರಿಯ ತರ ಓಡುತ್ತಿದ್ದ, ಈಗ ’ ನೆರಳು ’ ಬಿದ್ದು ತನಗೆ ಸಾಧ್ಯವಾಗುತ್ತಿಲ್ಲ ಎನ್ನುವ ಭಾವ ವಿರಬಹುದು. ನೀವೆಲ್ಲರೂ ನಾಳೆ ಇದೇ ’ ನೆರಳು’ ನಿಮ್ಮಮೇಲೆ ಬೀಳುವಾಗ ನನ್ನ ಹಾಗೆ ಆಗುತ್ತೀರಿ ಎನ್ನುವ ಇನ್ನೊಂದು ಭಾವ ಸಹ ಇರಬಹುದು. ನೆರಳು ಎಂದರೆ ಮುಪ್ಪು ಅಂತ ಅವನರ್ಥ. ಪಾರ್ಕಿನೊಳಗೆ ಕಾಲಿಟ್ಟ. ಒಳಗೆ ಎಂಥಾ ಒಳ್ಳೆ ಸಂಗೀತ ! ಪಾರ್ಕಿನಲ್ಲಿ….. ಆ ಸಮಯದಲ್ಲಿ ಸಂಗೀತನಾ… ಅಂತ ನೀವು ಕೇಳಬಹುದು. ಪ್ರಶಾಂತತೆಗೆ ಆತನ ನಿಘಂಟುವಿನಲ್ಲಿಯ ಹೆಸರು ಸಂಗೀತ…… ಪ್ರಶಾಂತತೆಗಿಂತ ಮಿಗಿಲಾದ ಇಂಪಾದ ಸಂಗೀತ ಬೇರೇ ಇರಲಾರದು ಅಂತ ಆತನ ಅಚಲ ನಂಬಿಕೆ. ಹೂಗಿಡಗಳ ನಡುವೆ ಹಾಕಿದ ಬಂಡೆಗಳ ಮೇಲೆ ನಡೆಯುತ್ತಿದ್ದ. ಪಕ್ಕಕ್ಕೆ ನೋಡುತ್ತಾ “ ಈ ಹುಡುಗೀರು ಇನ್ನೂ ಏಳ್ಳಿಲ್ಲ ಅಂತ ಕಾಣತ್ತೆ….. ಮಲ್ಕೊಳ್ಳಿ.  ನಿದ್ರೆಮಾಡಿ.  ಸೊಗಸಾದ ಕನಸು ಕಾಣಿರಿ ಹಾಯಾಗಿ…. ನನ್ನ ಮುದ್ದು ಹುಡುಗಿಯರೇ “ ಅಂದ. ಹೌದು. ಮತ್ತೆ……ಆ ರಸಿಕನ ಹೃದಯದ ಭಾಷೆಯ ಪ್ರಕಾರ ಹೂಗಳು ಮತ್ತು ಹುಡುಗಿಯರೂ ಒಂದೇ….. ಹಾಗಾದರೆ ಹುಡುಗಿಯರಿಗೆ ಏನು ಹೆಸರಿಟ್ಟಿದ್ದಾನೋ ಅಂತ ನಿಮಗೆ ಸಂದೇಹವಾಗಬಹುದು ಅಲ್ಲವೇ ! ಅದೋ ನೋಡಿ…. ಸ್ವಲ್ಪ ದೂರದಲ್ಲಿ ಇಬ್ಬರು ಹುಡುಗೀರು ಸ್ಕಿಪ್ಪಿಂಗ್ ಮಾಡ್ತಾ ಇದ್ದರು. “ ಹಾಯ್ ಚಾಕ್ಲೆಟ್ಸ್ “ ಅಂತ ಸಂಬೋಧಿಸಿದ. ಅವರು ಸಣ್ಣಗೆ ನಕ್ಕರು. ಹುಡುಗೀರಿಗೆ ಚಾಕ್ಲೆಟ್ ಗಳೆಂದರೆ ಇಷ್ಟ ಅಲ್ಲವಾ ! ಅದಕ್ಕೆ ಅವರಿಗೆ ಆ ಹೆಸರು. ಅಲ್ಲಿಗೆ ಆತನಿಗೆ ನಡೆದು ನಡೆದು ಸಾಕಾಯಿತು. ಕಾಲು ಹರಿಯುತ್ತಿದೆ ಎನಿಸಿತು. ಒಂದು ಮಂಚದ ಮೇಲೆ ಕುಳಿತುಕೊಂಡ…. ಪಾರ್ಕಿನಲ್ಲಿಯ ಕಲ್ಲಿನ ಸೋಫಾಗಳೆಲ್ಲಾ ಆತನಿಗೆ ಮಂಚಗಳೇ. ಕಣ್ಣು ಮುಚ್ಚಿ ಸ್ವಲ್ಪ ಹೊತ್ತು ಧ್ಯಾನದಲ್ಲಿ ಮಗ್ನನಾದ. ಸಮಯ ಆರುಗಂಟೆಯಾಯಿತು. ಬೆಳಕಿನ ಕಿರಣಗಳು ಜಗತ್ತನ್ನು ಬೆಳಗಲು ಶುರುಮಾಡಿದ್ದವು. ಹತ್ತು ನಿಮಿಷದ ನಂತರ ಕಣ್ಣು ಬಿಟ್ಟು ಅಲ್ಲಿಂದ ಎದ್ದ. ಮತ್ತೆ ನಡಿಗೆ. ತೋಟದಲ್ಲಿ ಸುತ್ತಾಡುತ್ತಾ ಯಾವುದೋ ಹಾಡು ಹಾಡಿಕೊಳ್ಳುತ್ತಿದ್ದ. ಆತನ ಪಕ್ಕಕ್ಕೆ ನಡೆಯುತ್ತಿದ್ದ ಐವತ್ತರ ಪ್ರಾಯದ  ಹೆಂಗಸು ಆತನ ರಾಗವನ್ನು ಉತ್ಸುಕತೆಯಿಂದ ಆಲಿಸಿದಳು. ಏನೂ ಅರ್ಥವಾಗಲಿಲ್ಲ. ಯಾವುದೋ ಹಳೆಯ ಹಾಡಿನ ಅಣಕ ಅದು. ಆದರೇ ಪದಗಳು ಅರ್ಥವಾದಹಾಗೆ ಅನಿಸಲಿಲ್ಲ. ಅದು ಆತನ ಸಂಕೇತ ಭಾಷೆಯಲ್ಲಿತ್ತು. ಮೆಲ್ಲಗೆ ತನ್ನಲ್ಲಿ ತಾನೇ ನಕ್ಕು, ಸರಸರಾ ಆತನನ್ನ ದಾಟಿ ಹೋದಳು. ಸೌಂದರ್ಯ ಬೆಣ್ಣೆಯಹಾಗೆ… ಕರಗಿಹೋಗುತ್ತಿರುತ್ತೆ. ಆದರೆ ಆನಂದ ಪಾಯಸದ ತರ ಒಂದು ದಿವ್ಯ ಅನುಭವ. ಜೀವನ ಒಂದು ಪ್ರವಾಹ. ಇವೆಲ್ಲ ಸೇರಿಸಿ ಹಾಡಿದ ಅಣಕ ಹಾಡು ಯಾರಿಗೆ ತಾನೇ ಅರ್ಥವಾದೀತು ? ಬೆಳ್ಳನೆ ಬೆಳಗಾಯಿತು. ಚುರುಕಾಗಿ ನಡೆಯುತ್ತಿದ್ದ ಆತ ಒಂದು ಕ್ಷಣ ಶಾಕ್ ಹೊಡೆದವರ ಹಾಗೆ ಎದೆಯ ಮೇಲೆ ಕೈಯಿಟ್ಟುಕೊಂಡು ಕಲ್ಲಿನ ತರ ಹಾಗೇ ನಿಂತು ಬಿಟ್ಟ. ಎದೆಗೆ ಯಾರೋ ಮೊನಚಾದ ಭರ್ಜಿಯಿಂದಿ ತಿವಿದಹಾಗೆ ಅನಿಸಿತು. ಆತನಿಗೆ ಹೃದಯಾಘಾತವಾಗಿತ್ತು. ಅದು ಆತನಿಗೆ ಮೊದಲನೆಯಸಲ ಅನುಭವಕ್ಕೆ ಬಂದಿತ್ತು. ಹಣೆಯ ಮೇಲೆ ಬೆವರು ಮಡುಗಟ್ಟಿತು. ಮೈಯಲ್ಲೆಲ್ಲಾ ಛಳುಕು ಬಂದಂತಾಯಿತು. ದೇಹ ಬೆಂಡಾಗುತ್ತಿತ್ತು. ನೆಲಕ್ಕೆ ಕುಸಿದ. ಯಾರೋ ಆತನ ಮುಖಕ್ಕೆ ನೀರು ಚೆಲ್ಲಿ, ಎಬ್ಬಿಸಿ ಕೂರಿಸಿದರು. ಕಣ್ಣು ತೆಗೆದು ನೋಡಿ ಎದುರಲ್ಲಿ ಕಂಡ ಮಧ್ಯವಯಸ್ಸಿನ ವ್ಯಕ್ತಿಯನ್ನೊಮ್ಮೆ ಕೃತಜ್ಞತೆಯಿಂದ ನೋಡಿದ. “ ಧಾರೆ….ಧಾರೆ…. “ ಎಂದ. “ಏನಂದ್ರಿ ?” ಆ ಉಪಕಾರಿ ಕೇಳಿದ. ಅವನ ಕೈಲಿದ್ದ ಬಾಟಲಿಯ ಕಡೆಗೆ ನೋಡುತ್ತಾ ಆತ “ ಧಾರೆ “ ಎಂದ. ಅರ್ಥ ಮಾಡಿಕೊಂಡವನ ಹಾಗೆ ಅವನು ಆ ಬಾಟಲ್ ಎತ್ತಿ ನೀರು ಕುಡಿಸಿದ. ಗುಟುಕು ಹಾಕುತ್ತಾ ಕುಡಿದು ಚೇತರಿಸಿಕೊಂಡ. ತನ್ನ ಪ್ರಾಣ ಉಳಿಸಿದವನಿಗೆ ಕೈಯೆತ್ತಿ ನಮಸ್ಕರಿಸುತ್ತಾ “ ರತ್ನಗಳು “ ಎಂದ. ಕೃತಜ್ಞತೆಗಳು ರತ್ನದ ಹಾಗೆ ಅಂತ ಅವನಿಗೆ ಗೊತ್ತಾಗದೇ ಈತನನ್ನ ಹುಚ್ಚನನ್ನ ನೋಡುವ ಹಾಗೆ ನೋಡಿ ನಕ್ಕ ಅವನು. ನಮ್ಮ ಕತೆಯ ನಾಯಕ ತನ್ನ ಬೆತ್ತದ ಸಹಾಯದಿಂದ ಮೇಲೆದ್ದ. ಆ ಹೊಸಬ ಮುಂದಕ್ಕೆ ಸಾಗಿದ. ಮತ್ತೆ ನಡೆಯಲು ಮೊದಲು ಮಾಡಿದ. ಆದರೆ ತುಂಬಾ ಹೊತ್ತು ನಡೆಯಲಾಗಲಿಲ್ಲ ಆತನಿಗೆ. ಒಂದು ಆಟೋ ನಿಲ್ಲಿಸಿ, ಹತ್ತಿ “ ನಡೆ ” ಎನ್ನುವ ಹಾಗೆ ಸನ್ನೆ ಮಾಡಿದ. “ ಎಲ್ಲಿಗೆ ?” ತನ್ನ ಕಿಸೆಯಿಂದ ಒಂದು ವಿಜಿಟಿಂಗ್ ಕಾರ್ಡ್ ತೆಗೆದು ಅವನಿಗೆ ತೋರಿಸಿದ. ಅದರಲ್ಲಿ ಆತನ ಹೆಸರಿಲ್ಲ. ಅದು ನೀಲಿಮಾ ಟವರ್ಸಿನ ವಿಳಾಸವಿರುವ ಕಾರ್ಡ್. ಅದರ ಮೇಲಿನ ಒಂದು ಮೂಲೆಯಲ್ಲಿ ಪೆನ್ನಿನಿಂದ ೧೦೧ ಅಂತ ಬರೆದಿತ್ತು. ಹತ್ತು ನಿಮಿಷಗಳಲ್ಲಿ ಆಟೋ ಅಪಾರ್ಟ್ ಮೆಂಟಿನ ಮುಂದೆ ನಿಲ್ಲುತ್ತಲೇ, ಆತ ಹಣ ಕೊಟ್ಟು ತನ ಮನೆಗೆ ನಡೆದ. ಒಳಗೆ ಹೋಗಬೇಕೆನ್ನುವಷ್ಟರಲ್ಲಿ ಏನೋ ನೆನಪಾಗಿ ಹಿಂತಿರುಗಿದ. ಅಲ್ಲಿಗೆ ಸ್ವಲ್ಪ ದೂರದಲ್ಲಿದ್ದ ಟೀ ಹೋಟಲ್ ಕಡೆಗೆ ನಡೆದ. ಅದರ ಪಕ್ಕಕ್ಕೆ ಒಂದು ಟೆಲಿಫೋನ್ ಬೂತ್ ಇತ್ತು. ಗಾಜಿನ ಬಾಗಿಲು ತೆಗೆದು ಅದರಲ್ಲಿ ಹೋಗಿ ಕೂತ. ಮೈ ದಣಿವಿನಂದ ನಡುಗುತ್ತಿತ್ತು. ಕಿಸಿಗೆ ಕೈಹಾಕಿ ಯಾವುದೋ ಕಾಗದ ಹೊರಗೆ ತೆಗೆದ. ಅದರಲ್ಲಿಯ ಯಾವುದೋ ಫೋನ್ ನಂಬರ್ ನೋಡಿ ಅದನ್ನ ಅಲ್ಲಿ ಕುಳಿತಿದ್ದ ಹುಡುಗಿಗೆ ತೋರಿಸಿದ. ಆ ಹುಡುಗಿ ಆ ನಂಬರ್ ನ ತನ್ನ ಹತ್ತಿರವಿದ್ದ ಕಾಗದದ ಮೇಲೆ ಬರೆದುಕೊಂಡಳು. ಆತ ಏನೋ ನೆನಪಿಸಿಕೊಳ್ಳುವ ಹಾಗೆ ಪ್ರಯತ್ನಿಸಿದ. ಸಾಧ್ಯವಾಗಲಿಲ್ಲ ಅಂತ ಕಂಡಿತು. ತನ್ನ ಕಿಸೆಯಲ್ಲಿಯ ವಿಜಿಟಿಂಗ್ ಕಾರ್ಡ್ ತೆಗೆದು ಅವಳಿಗೆ ಕೊಟ್ಟು “ ಈ ವಿಳಾಸಕ್ಕೆ ಒಂಬತ್ತು ಗಂಟೆಗೆ ಬರಲಿಕ್ಕೆ ಹೇಳು” ಎನ್ನುವ ಹಾಗೆ ಸನ್ನೆ ಮಾಡಿದ. ಅವಳಿಗೆ ಅರ್ಥವಾಯಿತು. ಫೋನ್ ರಿಂಗಾಗುತ್ತಿತ್ತು. ನಿಮಿಷದ ನಂತರ “ ಹಲೋ “ ಎಂದಳು ಆ ಹುಡುಗಿ. ಆತ ಅವಳ ಕಡೆಗೇ ನೋಡುತ್ತಿದ್ದ. “ ಹಲೋ….. ಈ ನಂಬರ್ ಯಾರದು ಸರ್.  ಲಾಯರ್ ಪರಮಹಂಸ ಅವರದಾ ? ಇಲ್ಲಿ ನೀಲಿಮ ಟವರ್ಸಿನ  ೧೦೧ ನೇ ಫ್ಲಾಟಿನ ಯಾರೋ ಹಿರಿಯರು ಫೋನ್ ಮಾಡ್ತಾ ಇದಾರೆ. ನಿಮ್ಮನ್ನ ಅವರ ಮನೆಗೆ ಒಂಬತ್ತು ಗಂಟೆಗೆ ಬರಲು ಹೇಳ್ತಾ ಇದ್ದಾರೆ “ ಆಕಡೆಯಿಂದ “ ಆಯಿತು” ಅಂತ ಕೇಳಿಸುತ್ತಲೇ ಫೋನ್ ಇಟ್ಟು “ ಬರ್ತಾರಂತೆ” ಎಂದಳು. ಆತ ಹಣ ಆಕೆಯ ಕೈಯಲ್ಲಿಟ್ಟು “ ರತ್ನಗಳು, ವಜ್ರಗಳು “ ಅಂತ ಹೇಳಿ ಹೊರಬಂದ. ಆ ಹುಡುಗಿ ಸ್ವಲ್ಪ ವಿಚಿತ್ರವಾಗಿ, ಸ್ವಲ್ಪ ಭಯದಿಂದ, ಸ್ವಲ್ಪ ಮುಜುಗರದಿಂದ, ಆಸಕ್ತಿಯಿಂದ ನೋಡುತ್ತಲೇ ಇದ್ದಳು. ಆತ ಮನೆ ಸೇರಿ ಬೀಗ ತೆಗೆದು ಒಳಗೆ ಹೋಗಿ ಬಾಗಿಲು ಹಾಕಿಕೊಂಡ. ಲಾಯರ್ ತಪ್ಪದೇ ಬರುತ್ತಾರೆಂದು ಆತನಿಗೆ ಗೊತ್ತು. ಆತನಿಗೀಗ ನಿಜವಾಗ್ಲೂ ಆತಂಕ ಹೆಚ್ಚಿತ್ತು. ತನಗೆ ಮೊದಲನೆಯ

ಹೃದಯ ಭಾಷೆ Read Post »

ಇತರೆ

ಯುವ ಗಜಲ್‌ ಕವಿ ಶಿವಪ್ರಕಾಶ ರು ಕುಂಬಾರ ಹೆಸರು: ಶಿವಪ್ರಕಾಶ ರು ಕುಂಬಾರ(ನಂರುಶಿ ಕಡೂರು) ವಯಸ್ಸು: ೩೨ ಶಿಕ್ಷಣ: ಐಟಿಐ ,ಡಿಪ್ಲೋಮಾ ವೃತ್ತಿ: ಬೆಂಗಳೂರು ಮೆಟ್ರೋ ರೈಲ್ವೆನಲ್ಲಿ ಕಿರಿಯ ಅಭಿಯಂತರ ಪ್ರಕಟಿತ ಕೃತಿಗಳು : ೧) ಅಮೃತ ಸಿಂಚನವು ನಿಮಗಾಗಿ ( ಕವನ ಸಂಕಲನ) ೨) ಕಾಮನ ಬಿಲ್ಲು ಬಣ್ಣ ಬೇಡುತಿದೆ (ಗಜಲ್ ಸಂಕಲನ) ೩) ನೇರಿಶಾ (ಗಜಲ್ ಸಂಕಲನ) ಸಂಗಾತಿಓದುಗರಿಗೆ ಇವರದೊಂದು ಗಜಲ್ ಸತ್ತವನ ಮನೆಯ ಗೋಳು ನನಗೂ ಕೇಳುತಿದೆ ಗಾಲಿಬ್ಯಮ ಕಿಂಕರರ ನರ್ತನ ಎಲ್ಲೇ ಮೀರುತಿದೆ ಗಾಲಿಬ್ ಹಸಿದ ಹೆಬ್ಬುಲಿಯಂತೆ ರಣಕೇಕೆ ಹಾಕುವುದು ಏಕೆಮಸಣವು ನರ ಜೀವಗಳ ತಾನೇ ಬೇಡುತಿದೆ ಗಾಲಿಬ್ ಅಂಗುಲಿಮಾಲನಂತೆ ಕೊರಳಲಿ ಅದೆಷ್ಟು ಬುರುಡೆಗಳೋಜಗವನು ಸುತ್ತುತ ತಮಟೆ ಬಡಿದು ಸಾರುತಿದೆ ಗಾಲಿಬ್ ಮೊಗ್ಗುಗಳನೂ ಬಿಡದೆ ಚಿವುಟಿ ಊದುವುದು ನ್ಯಾಯವೇರಾಶಿ ಹೆಣಗಳ ತೋರಿಸಿ ಎಚ್ಚರ‌ ನೀಡುತಿದೆ ಗಾಲಿಬ್ ಹೇಡಿಯಂತೆ ಹೆದರಿ ಇನ್ನೆಷ್ಟು ದಿನ ಉಸಿರ ಹಿಡಿದಿಡಲಿನಂರುಶಿ ಜೀವ ಕೂಡ ಎಲ್ಲರಲಿ ಸೇರುತಿದೆ ಗಾಲಿಬ್. **********************************

Read Post »

ಅನುವಾದ

ಅನುವಾದಿತಕವಿತೆ ನನ್ನ ಗಾಂಧಿ ಕನ್ನಡಕ್ಕೆ: ಶೈಲಜಾ ಬಿ. ಇಂಗ್ಲೀಷಿಗೆ: ಸಮತಾ ಆರ್. ನನ್ನ ಗಾಂಧಿ ಬೋಳು ತಲೆ ಕಣ್ಣಲ್ಲಿ ಚಾಳೀಸುಕೈಯಲ್ಲಿ ಕೋಲುಮುಖದಲೊಂದು ಮಾಗಿದ ನಗೆಯಗಾಂಧಿ ನನ್ನೊಳಗೆ ನೀನುತಾತನಾಗಿ ಹುಟ್ಟಿದೆ ಹೆಡ್ ಮಾಸ್ತರರ ಕೋಣೆಯಗೋಡೆಯ ಮೇಲೆಪೋಟೋದಲ್ಲಿ ನೀನಿದ್ದೆವರುಷದಲ್ಲಿ ಮೂರು ಬಾರಿನನ್ನ ಕೈಗೂ ನಿಲುಕಿಚೌಕಟ್ಟು ತಿಕ್ಕಿ ಗಾಜು ಒರೆಸಿಹೂಮಾಲೆ ಹಾಕಿ ಜೈಕಾರ ಕೂಗಿಲಡ್ಡು ತಿನ್ನುವಾಗಬಾಯಿ ತುಂಬ ಸಿಹಿಮನದಲ್ಲಿ ಖುಷಿ ಬೆಳೆದಂತೆ ನಾನು ನೀನೂ ಬೆಳೆದೆತಾತ ಮಹಾತ್ಮನಾದೆಸರಳ ಸತ್ಯ ಅಹಿಂಸೆಗಳಸಾಕಾರ ಮೂರ್ತಿಯಾದೆಬೆಳಕಾದೆ ಧಮನಿಯಲಿ ಬಿಸುಪುಮನದಲ್ಲಿ ಹುರುಪುತುಂಬಿದ್ದ ಕಾಲದಲಿಹೊನಲಿಗೆದುರು ಈಜುವ ಕನಸಿತ್ತುಕಂಗಳಲಿ ನಿನ್ನ ಬಿಂಬವಿತ್ತು ನಿನ್ನ ಹಾಗೆ ಚಾಳೀಸುನನಗೂ ಬಂದಿದೆ ಈಗಕಚೇರಿಯ ನನ್ನ ಕುರ್ಚಿಯ ಹಿಂದೆನಿನ್ನ ಪಟ ತೂಗು ಹಾಕಿರುವೆ ಕಣ್ಣಾಡಿಸುವೆ ಹೆಣ್ಣಿನ ಮೇಲೆರಿಗಿದರಕ್ಕಸರ ಎಫ್ ಐ ಆರ್ಪ್ರತಿಗಳ ಮೇಲೆಪಾನಮತ್ತ ಪಿಶಾಚಿ ಪತಿಯಕತೆ ಹೇಳುವ ಡಿ ಐ ಆರ್ ನಪುಟಗಳ ಮೇಲೆಹತ್ತಿಕ್ಕುವೆ ಎದೆಯೊಳಗೆಭುಗಿಲೇಳುವ ಹೊನಲಅದು ಪಾದಮಸ್ತಕಾದಿಯಾಗಿ ಹರಿದುಪೆನ್ನಿನ ತುದಿಯಲ್ಲಿ ಸ್ತಬ್ದವಾಗುವುದು ಬಾಪೂ ನಿನ್ನ ಚರಿತೆಅರಿವುದೆಷ್ಟು ಸುಖವೋಆ ಹಾದಿಯ ತುಳಿವಸುಖವೂ ನನ್ನೀ ಆತ್ಮಕ್ಕಿರಲಿ My Gandhi.. Bald head,spectacled eyes,A stick in hands,A smile on ur wrinkled face,Gandhi you were born as aGrandpa in me. You were in a photoOn a wall of the chamberOf our headmaster.Even I could reach youThrice in a year. When we were eating a ladduAfter scrubbing the frame,Cleaning the glass,Decorating with a garland,And hailing a JaiSweetness in my mouth,And happiness filled my heart. You too grew along with me,Grandpa became a Mahatma,You became an embodimentOf simple truth,non violenceAnd lit our path. At a time when there wasWarmth in veins, spirit in the heart,Dreamt of swimming against the tide,Your image was in my eyes. Now I too have gotspectacles like you.Hanging a portrait of yoursOn the wall behind my chairIn my office. I am glancing the FIRsOf the devils who pouncedUpon the girls.DIR pages telling the storiesOf drunken demonic husbands. I Control the flamming riverIn my heart,that flows throughoutFrom head to toeand settles at the tip of the pen. Bapu, how cheerful I becomeknowing your story,Let the same happiness fill my soul,While treading your path. *******************************

Read Post »

You cannot copy content of this page

Scroll to Top