ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಯುವ ಗಜಲ್ ಕವಿ ಚೇತನ್ ನಾಗರಾಳ ಹೆಸರು : ಚೇತನ್ ನಾಗರಾಳ.ವಯಸ್ಸು : ೨೫ಶಿಕ್ಷಣ : ಬಿ‌.ಕಾಮ್ವೃತ್ತಿ : ಖಾಸಗಿ ಬ್ಯಾಂಕ್ ಉದ್ಯೋಗಿಪ್ರಕಟಿತ ಕೃತಿಗಳು: ೧) ಹೀಗೊಂದು ಯುದ್ಧ ಬುದ್ಧನೊಂದಿಗೆ (ಕವನ ಸಂಕಲನ)೨) ಖಾಲಿ ಕೋಣೆಯ ಹಾಡು (ಗಜಲ್ ಸಂಕಲನ) ವಿಳಾಸ :ಚೇತನ್ ನಾಗರಾಳ204 , ವಾರ್ಡ್ ನಂ 1ಬಸವ ವೃತ್ತದ ಹತ್ತಿರಬೀಳಗಿ – 587116ಜಿಲ್ಲೆ : ಬಾಗಲಕೋಟಮೊ :8861888130 —————————– ಸಂಗಾತಿಯ ಓದುಗರಿಗೆ ಇವರದೊಂದು ಗಜಲ್ ಒಮ್ಮೆ ಉಳಿಸಿಕೊ ನೀನು ಈ ರಾತ್ರಿ ಮತ್ತೆ ಬರುವುದಿಲ್ಲನೆನಪಿರಲಿ ಈ ಘಳಿಗೆಯೇ ಮಧುರ ನಮಗೆ ನಾಳೆಗಳು ಇರುವುದಿಲ್ಲ.. ನಿನ್ನದೋ ಸ್ವರ ನನ್ನದೋ ಯಾವುದಾದರೇನಂತೆಇಲ್ಲಿ ಯಾರೂ ನಮ್ಮ ದುಃಖಗಳನ್ನು ಹಾಡುವುದಿಲ್ಲ.. ನಿನ್ನ ಕೋಣೆಯ ಮಂದ ಬೆಳಕಿನ ದೀಪ ನಾನುಹೌದು, ಪ್ರೀತಿ ಯಾರನ್ನೂ ಸುಮ್ಮನೇ ಸುಡುವುದಿಲ್ಲ.. ಈ ಗಾಳಿಯಲ್ಲಿ ಅಂತಹ ಹಿತವೇನೂ ಇಲ್ಲತೇಯಲಾರದೆ ಗಂಧ ಸೂಸುವುದಿಲ್ಲ.. ಅಲೆಗಳೆಂದೂ ಭಾರವಲ್ಲ ಕಡಲಿಗೆ ಚೇತನಗಳವುಕೇಳಿಲ್ಲಿ, ಬದುಕು ನಮ್ಮಿಂದ ಏನನ್ನೂ ಬಯಸುವುದಿಲ್ಲ.. ******************************************* ************************************************************************

Read Post »

ಅಂಕಣ ಸಂಗಾತಿ, ಚಿತ್ತ ಜನ್ಯ

ಅಂಕಣ ಬರಹ “ಸಿಕ್ಕಿತಾ ಎಂದರೆ ಸಿಕ್ಕಿಲ್ಲ ಎಂಬುದೇ ಉತ್ತರ…” ಆಗಾಗ ಕೆಲವರು ಬರಹವನ್ನೂ ಮತ್ತು ಬರೆದ ಬರಹಗಾರನನ್ನೂ ಒಂದೆನ್ನುವಂತೆ ಭಾವಿಸಿ ಅನುಮಾನದಿಂದ ನೋಡುವುದನ್ನು ನೋಡುತ್ತಿರುತ್ತೇವೆ. ಗೆಳೆಯರು ಇದನ್ನು ಬಾರಿ ಬಾರಿ ಹೇಳಿಕೊಳ್ಳುತ್ತಿರುತ್ತಾರೆ. ಅಲ್ಲದೆ ಇದು ಪ್ರತಿಯೊಬ್ಬ ಬರಹಗಾರನಿಗೂ ಒಂದಲ್ಲಾ ಒಂದು ಬಾರಿ ಎದುರಿಸಬೇಕಾಗಿ ಬರುವ ಸಾಮಾನ್ಯ ಸನ್ನಿವೇಶವೂ ಆಗಿರುತ್ತದೆ. ಆದರೆ ಓದುಗರು ಒಂದು ಮಾತನ್ನು ನೆನಪಿನಲ್ಲಿಡಬೇಕು. ಅವನು ಬರಹಗಾರ… ತನಗೆ ಕಂಡ, ಅನುಭವಿಸಿದ, ಇರರ ಅನುಭವದಿಂದ ಅರಿತ ಎಲ್ಲವನ್ನೂ ಒಂದಾಗಿಸಿ ಬರಹದ ಮೂಲತತ್ವದ ಅಚ್ಚಿಗೆ ಸುರಿದು ಓದುಗರಿಗೆ ಮೆಚ್ಚುಗೆಯಾಗುವಂತೆ ಉಣಬಡಿಸುತ್ತಾನೆ. ಸದಾ ತನ್ನದೇ ವ್ಯಯಕ್ತಿಕ ಅನುಭವವನ್ನು ಬರೆಯುವುದಾದರೆ ಅದು ಅವನ ಆತ್ಮಚರಿತ್ರೆ ಆಗುತ್ತದೆ ಹೊರತು ಸಾಹಿತ್ಯ ನಿಸಿಕೊಳ್ಳುವುದಿಲ್ಲ. ಹೆಣ್ಣೊಬ್ಬಳು ಲೈಂಗಿಕ ವಿವರಗಳನ್ನು ತನ್ನ ಬರಹಗಳಲ್ಲಿ ಬಳಸಿದಾಕ್ಷಣ ಅವಳ ಚಾರಿತ್ರ್ಯವಧೆಗೆ ನಿಂತುಬಿಡುವುದು ಎಷ್ಟು ಸಮಂಜಸ. ಹಾಗಂತ ಪುರುಷ ಲೇಖಕರ ಸ್ಥಿತಿಯೂ ಚನ್ನಾಗೇನೂ ಇಲ್ಲ. ಆದರೆ ಸಮಾಜ ಅವರಿಗೆ ಒಂದು ಸಣ್ಣ ಮಾರ್ಜೀನನ್ನು ಕೊಡುತ್ತದೆ ಅಷ್ಟೇ. ಇವತ್ತಿಗೆ ಪರಿಸ್ಥಿತಿ ಒಂಚೂರು ಸುಧಾರಿಸಿಕೊಂಡಿದೆ ಆದರೂ ಕುಹಕದ ನಗು ಮತ್ತು ಅನುಮಾನದ ದೃಷ್ಟಿ ಸಂಪೂರ್ಣ ಮರೆಯಾಗಿಲ್ಲ. ನವರಸ ಎಂದರೆ ಶೃಂಗಾರ, ಹಾಸ್ಯ, ವೀರ, ಅದ್ಭುತ, ಭಯಾನಕ, ಶಾಂತ, ಕರುಣಾ, ರೌದ್ರ, ಭೀಭತ್ಸ… ಎಲ್ಲವೂ ಸೇರಬೇಕು. ಅದೇ ರೀತಿ ಪ್ರತಿ ಕಲೆಯೂ ನವರಸಗಳಿಂದಲೇ ತುಂಬಿ ಪರಿಪೂರ್ಣವಾಗಬೇಕು. ಅದಕ್ಕೆ ಸಾಹಿತ್ಯವೂ ಹೊರತಲ್ಲ. ಹೀಗಿರುವಾಗ ಅದರಲ್ಲಿನ ಒಂದು ಭಾವವನ್ನೇ ನಿರಾಕರಿಸಿಬಿಡುವುದು ಪರಿಪೂರ್ಣತೆಗೆ ಧಕ್ಕೆಯಾದಂತಲ್ಲವೇ… ಒಮ್ಮೆ ನನ್ನ ಒಂದು ಕತೆಯನ್ನು ಓದಿದ ಗೆಳತಿಯೊಬ್ಬಳು “ಅವನು ಯಾರು, ಈಗ ಎಲ್ಲಿದ್ದಾನೆ” ಎಂದೆಲ್ಲಾ ಕೇಳಲು ಶುರುಮಾಡಿದಳು. “ಇಲ್ಲ ಮಾರಾಯ್ತಿ, ಹಾಗೆಲ್ಲ ಎಂತದ್ದೂ ಇಲ್ಲ. ಯಾರದ್ದೋ ಕತೆ ಅದಕ್ಕೆ ಸ್ಫೂರ್ತಿ ಅಷ್ಟೇ… ಮತ್ತೆ ಉಳಿದದ್ದೆಲ್ಲ ಕಟ್ಟುಕತೆ ಅದು…” ಎಂದು ಎಷ್ಟು ಹೇಳಿದರೂ ಅವಳು ನಂಬಲು ಸಿದ್ಧಳಾಗಲೇ ಇಲ್ಲ! ಇರಲಿ, ನಮ್ಮ ಸುತ್ತಮುತ್ತಲ ಬದುಕು, ಸಮಾಜ ನಮ್ಮನ್ನು ಬಹಳಷ್ಟು ಪ್ರಭಾವಿಸುತ್ತವೆ. ಆ ಪ್ರಭಾವವೇ ನಮ್ಮನ್ನು ಬೆಳೆಸುತ್ತವೆ. ಅದನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ಕೆಲವೊಮ್ಮೆ ತೀರಾ ಹತ್ತಿರದ ಸಂಬಂಧಿಗಳೇ ನಮ್ಮ ಕತೆ ಅಥವಾ ಕವಿತೆಯ ನಾಯಕರೂ ಆಗಿಬಿಡುತ್ತಾರೆ. ಅದು ಇನ್ನೊಂಥರದ ಬಿಸಿತುಪ್ಪ. ಅದು ಅವರು ಇಷ್ಟಪಡುವಂತಹ ರೀತಿಯಲ್ಲಿದ್ದರೆ ಸರಿ, ಇಲ್ಲವಾದರೆ ಅವರ ವಿರಸವನ್ನೂ ಕಟ್ಟಿಕೊಳ್ಳಬೇಕಾದ ಪರಿಸ್ಥಿತಿ. ಇದೆಲ್ಲವನ್ನೂ ಮೀರಿ ಬರಹಗಾರ ಬರಹವನ್ನು ಉಳಿಸಬೇಕಿರುತ್ತದೆ. ಮನುಷ್ಯರು ಅಳಿಯುತ್ತಾರೆ. ಪಾತ್ರಗಳು ಉಳಿಯುತ್ತವೆ. ಬರಹಗಾರ ಅಳಿಯುತ್ತಾನೆ ಪುಸ್ತಕಗಳಷ್ಟೇ ಉಳಿಯುತ್ತವೆ. ಬರಹ ಒಂದಿಡೀ ಕಾಲಮಾನದ ಧ್ಯೋತಕವಾಗಿರುತ್ತದೆ. ಒಬ್ಬ ವ್ಯಕ್ತಿಯ ವಿವರ ಬರಹದ ಮೂಲಕ ಸಾಮಾನ್ಯೀಕಣಗೊಳ್ಳುತ್ತದೆ. ಇಲ್ಲವಾದರೆ ಓದುವ ಬಹಳಷ್ಟು ಮಂದಿ ಇದು ನನ್ನದೇ ಮಾತು, ಇದು ನನ್ನದೇ ವಿವರ, ಇದು ನನ್ನದೇ ಪರಿಸ್ಥಿತಿ ಎನ್ನುವಂತೆ ಓದಿಕೊಳ್ಳುವರಲ್ಲ ಹೇಗೆ… ಮತ್ತೆ ಬರಹಗಾರನಿಗೂ ತಾನು ಕಂಡುಂಡ ವಿಚಾರವನ್ನು ಕತೆ ಅಥವಾ ಕವಿತೆಗೆ ಬ್ಲೆಂಡ್ ಮಾಡುವ ಕಲೆ ತಿಳಿದಿರಬೇಕಿರುತ್ತದೆ.  ಆದರೆ ಒಂದು ಭಾವತೀವ್ರತೆಯಲ್ಲಿ ಬರೆಯ ಹೊರಟ ಹುಮ್ಮಸ್ಸಿನಿಂದಾಗಿ ಬರಹ ವಾಚ್ಯವಾಗುವುದನ್ನು ತಪ್ಪಿಸುವುದು ಕಷ್ಟವಾಗಿಬಿಡುತ್ತದೆ. ಆಗ ಪು.ತಿ.ನ.ರು ಹೇಳಿದ ಭವನಿಮಜ್ಜನ ಮತ್ತು ಲಘಿಮಾ ಕೌಶಲ ನೆನಪಾಗಬೇಕು ಮತ್ತು ಈ ಕಷ್ಟದಿಂದ ಪಾರಾಗುವುದನ್ನು ಪ್ರತಿಯೊಬ್ಬ ಬರಹಗಾರನೂ ಕಲಿಯಬೇಕು. ಎಲ್ಲವನ್ನೂ ವಾಚ್ಯವಾಗಿ ಹೇಳುವುದಾದರೆ ಕತೆ, ಕವಿತೆ, ಪ್ರಬಂಧ… ಎನ್ನುವ ಯಾವ ಸಾಹಿತ್ಯ ಪ್ರಕಾರಗಳ ಅವಶ್ಯಕತೆಯೂ ಇರುವುದಿಲ್ಲ. ಯಾವುದೇ ಬರಹ ವಾಚ್ಯವಾಗುತ್ತಾ ಹೋದಂತೆ ಓದುಗರ ಚಿಂತನೆಗೆ, ವಿಚಾರಕ್ಕೆ ಅವಕಾಶವೇ ಇಲ್ಲದಂತೆ ಆಗಿಬಿಡುತ್ತದೆ. ಎಲ್ಲವನ್ನೂ ಬರಹಗಾರನೇ ಹೇಳಿಬಿಟ್ಟ ಮೇಲೆ ವಿಚಾರ ಮಾಡಲಿಕ್ಕೆ ಇನ್ನೇನುಳಿಯುತ್ತದೆ?! ವಾಚ್ಯತೆ ಬರಹಗಾರನ ಬಹು ದೊಡ್ಡ ಶತ್ರು. ಅದನ್ನು ಮೀರುವುದೆಂದರೆ, ಮೊಸರನ್ನಕ್ಕೆ ಬಿದ್ದ ಕಲ್ಲನ್ನು ಎತ್ತಿ ಪಕ್ಕಕ್ಕಿಟ್ಟು ಸೇವಿಸುವಷ್ಟೇ ನಾಜೂಕಾಗಿ ಮಾಡಬೇಕಾದ ಕೆಲಸ. ಆ ನಾಜೂಕುತನ ಅಭ್ಯಾಸ ಮತ್ತು ಅಧ್ಯಯನ ಬಲದಿಂದ ಸಾಧ್ಯ. ಅವಸರದಿಂದ ಬರೆಯಲು ಹೊರಡುವ ಇಂದಿನ ಬರಹಗಾರರಿಗೆ ಸಾಹಿತ್ಯದ ಇತಿಹಾಸ ಬೇಕಿಲ್ಲ. ಹಿರಿಯರನ್ನು ಓದುವುದು ಬೇಡವಾಗುತ್ತಿದೆ. ಒಂದಷ್ಟು ಬರಹಗಳು ಪ್ರಕಟವಾದ ಕೂಡಲೇ ಅಹಮ್ಮಿಗೆ ಗುರಿಯಾಗಿಬಿಡುತ್ತೇವೆ. ಅದು ನಮ್ಮ ವಯಸ್ಸಿಗೆ ಸಹಜವಾದ ಕಾರಣ ಅದನ್ನು ಮೀರುವುದು ಸುಲಭವಲ್ಲ. ಆದರೆ ಹೆಚ್ಚು ಹೆಚ್ಚು ಓದುತ್ತಾ ಹೋದಂತೆ ಆ ಪೊರೆ ತನ್ನಿಂತಾನೆ ತನ್ನ ಅಸ್ತಿತ್ವವನ್ನು ಕಳಚಿಕೊಳ್ಳುತ್ತದೆ. ಯಾವುದೇ ಕಲೆಯಿರಲಿ ಅದು ಮನಸ್ಸನ್ನು ತಟ್ಟುವಂತಹ ಶಕ್ತಿಯನ್ನು ಹೊಂದಿರುತ್ತದೆ. ಅದು ಮೊದಲು ಕಲಾವಿದನನ್ನೇ ತನ್ನ ಹತೋಟಿಗೆ ತೆಗೆದುಕೊಳ್ಳುತ್ತದೆ. ನಂತರವೇ ಅದು ಅದರ ಆರಾಧಕನನ್ನು ತಲುಪುವುದು. ಒಮ್ಮೆ ಅದು ತನ್ನ ಹಿಡಿತಕ್ಕೆ ಯಾರನ್ನಾದರೂ ಸಿಲುಕಿಸಿಕೊಂಡುಬಿಟ್ಟಿತೆಂದರೆ ಅದು ಆ ವ್ಯಕ್ತಿಯನ್ನು ವಿನೀತನನ್ನಾಗಿಸಿಬಿಡುತ್ತದೆ. ಅಹಂಕಾರ ಇನ್ನಿಲ್ಲ ಅವನಲ್ಲಿ! ಸಾಹಿತ್ಯದ ಅಂತಿಮ ಪ್ರಭಾವವೂ ಅದೇ ಆಗಬೇಕಿದೆ. ಸಾಹಿತ್ಯ ಒಟ್ಟಾರೆ ನಮ್ಮ ವ್ಯಕ್ತಿತ್ವವನ್ನು ಪ್ರಭಾವಿಸಬೇಕು, ಮತ್ತದು ಧನಾತ್ಮಕವಾಗಿಯೇ… ಅದೇ ಅದರ ನಿಜವಾದ ಶಕ್ತಿ. ಹೀಗೆ ಇಷ್ಟೆಲ್ಲಾ ಸಾಹಿತ್ಯದ ಧ್ಯಾನ, ಗುಣಗಾನ… ಮಾಡಿಯಾದ ನಂತರವೂ ಅದರ ನಾಡಿ ಮಿಡಿತ ಸಿಕ್ಕಿತಾ ಎಂದರೆ ಸಿಕ್ಕಿಲ್ಲ ಎಂಬುದೇ ಉತ್ತರ… ************************************************************ –ಆಶಾ ಜಗದೀಶ್ ಶಿಕ್ಷಕಿ, ಗೌರಿಬಿದನೂರಿನಲ್ಲಿ ವಾಸಮೊದಲ ಪುಸ್ತಕ ಮೌನ ತಂಬೂರಿ- ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಹೊಂಡಿದೆ. ನಾದಾನುಸಂಧಾನ- ಅಂಕಣ ಬರಹದ ಪುಸ್ತಕ, ಮಳೆ ಮತ್ತು ಬಿಳಿಬಟ್ಟೆ- ಕಥಾ ಸಂಕಲನ ಮತ್ತು ನಡು ಮಧ್ಯಾಹ್ನದ ಕಣ್ಣು- ಕವನ ಸಂಕಲನ (ಅಚ್ಚಿನಲ್ಲಿದೆ) ಈ ವರ್ಷ ಹೊರಬರಲಿರುವ ಪುಸ್ತಕಗಳು. ಕರ್ನಾಟಕ ಲೇಖಕಿಯರ ಸಂಘದ ಗುಡಿಬಂಡೆ ಪೂರ್ಣಿಮಾ ದತ್ತಿನಿಧಿ ಬಹುಮಾನ, ಪ್ರಜಾವಾಣಿ ದೀಪಾವಳಿ ಕವನ ಸ್ಪರ್ಧೆಯಲ್ಲಿ ಮೆಚ್ಚುಗೆ ಗಳಿಸಿದ ಕವಿತೆ, ಜೀವನ್ ಪ್ರಕಾಶನದ ಯುಗಾದಿ ಕವನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಪ್ರಜಾವಾಣಿ ಸಂಕ್ರಾಂತಿ ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಸುಧಾ ಯುಗಾದಿ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಬಹುಮಾನ, ಮುಂಬೈನ ಶ್ರೀ ಜಗಜ್ಯೋತಿ ಕಲಾಸಂಘ ನೀಡುವ ಸುಶೀಲಾ ಶೆಟ್ಟಿ ಕಥಾ ಪ್ರಶಸ್ತಿ… ಇನ್ನು ಮುಂತಾದ ಬಹುಮಾನಗಳು ಬಂದಿವೆ.

Read Post »

ಅಂಕಣ ಸಂಗಾತಿ, ಹೊಸ ದನಿ-ಹೊಸ ಬನಿ

ಅಂಕಣ ಬರಹ ಹೊಸ ದನಿ ಹೊಸ ಬನಿ ೧೬ ಹುಚ್ಚು ಆದರ್ಶಗಳಿಲ್ಲದ ಭಾವ ಭಿತ್ತಿಯ ಸಹಜ ನಿರೂಪಣೆ ನಾಗರೇಖಾ ಗಾಂವಕರ್ ಕವಿತೆಗಳು ಅವಳ ಮಾಂಸ ಮಜ್ಜೆಯ ನೆರಳು, ಮುಟ್ಟಿನ ವಾಸನೆಬಡಿಯದೇ, ಪೊಗರಿದ ಅವನೆಂಬವನ  ಹುಡುಕಿ ಸೋತಿದ್ದೇನೆ, ಹುಡುಕಿ ಕೊಡು ಹೇ! ಪ್ರಭು. ಎಂದು ಗಟ್ಟಿಯಾಗಿ ಪ್ರಶ್ನಿಸುತ್ತಲೇ ಸುರುವಾಗುವ ಈ ಕವಿತೆ ಗಂಡಿನ ಅಹಮ್ಮನ್ನು ಗುರಾಯಿಸುತ್ತಲೇ ಕಡೆಗೆ ಆದರವನ ದೇವರಿಗೆ ಅವಳ ಮಾಂಸ ಮಜ್ಜೆಯ ನೆರಳು, ಮುಟ್ಟಿನ ವಾಸನೆ ಮೈಲಿಗೆಯಂತೆ. ಆ ದೇವನೆಂಬವನ ಹುಡುಕಿ ಕೊಡು ಹೇ! ಪ್ರಭು (ಹುಡುಕಿ ಕೊಡು) ಎನ್ನುವಾಗ ಸಾಮಾನ್ಯವಾಗಿ “ಅವನು” ಎಂದರೆ “ದೇವರು” ಎಂದೇ ಅರ್ಥೈಸಲಾಗುವ “ಅವನನ್ನೇ” ಹುಡುಕಿಕೊಡು ಎಂದು ಕೇಳುವ ಗತ್ತು ತೋರುತ್ತಲೇ ಒಟ್ಟೂ ಸಾಮಾಜಿಕ ವ್ಯವಸ್ಥೆಯ ಅಸ್ತಿತ್ವನ್ನೇ ಅಲುಗಾಡಿಸುವ ಉತ್ತರವೇ ಇಲ್ಲದ ಪ್ರಶ್ನೆಯನ್ನೆತ್ತುವ ಈ ಕಾವ್ಯಧ್ವನಿ ಶ್ರೀಮತಿ ನಾಗರೇಖಾ ಗಾಂವಕರ ಅವರದ್ದು. ನಾಗರೇಖಾ ಗಾಂವಕರ್ ಸಂಗಾತಿಯ ಓದುಗರಿಗೆ ಪರಿಚಿತ ಹೆಸರು. ಈಗಾಗಲೇ ಸಂಗಾತಿಯೂ ಸೇರಿದಂತೆ ಹಲವು ವೆಬ್ ಪತ್ರಿಕೆಗಳಲ್ಲದೇ ಮಯೂರ, ಕನ್ನಡಪ್ರಭ, ಉದಯ ವಾಣಿ ಪತ್ರಿಕೆಗಳಲ್ಲೂ ಇವರ ಕವಿತೆಗಳು ಆಗಾಗ ಪ್ರಕಟವಾಗುತ್ತಲೇ ಇರುತ್ತವೆ. ದಾಂಡೇಲಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿರುವ ಇವರು ಕಳೆದ ವರ್ಷ ಪ್ರಕಟಿಸಿದ್ದ “ಬರ್ಫದ ಬೆಂಕಿ” ಕವನ ಸಂಕಲನಕ್ಕೆ ಕರ್ನಾಟಕ ಲೇಖಕಿಯರ ಸಂಘದ ಬಹುಮಾನ ನಿನ್ನೆಯಷ್ಟೇ ಘೋಷಣೆಯಾಗಿದೆ. ಏಣಿ ಮತ್ತು ಪದಗಳೊಂದಿಗೆ ನಾನು, ಬರ್ಫದ ಬೆಂಕಿ[ ಕವನ ಸಂಕಲನಗಳು,] ಪಾಶ್ಚಿಮಾತ್ಯ ಸಾಹಿತ್ಯ ಲೋಕ, ಆಂಗ್ಲ ಸಾಹಿತ್ಯ ಲೋಕ[ಅಂಕಣ ಬರಹ ಕೃತಿ] ಸಮಾನತೆಯ ಸಂಧಿಕಾಲದಲ್ಲಿ [ಮಹಿಳಾ ಸಮಾನತೆಯ ಕುರಿತ ಅಂಕಣ ಬರಹ ಕೃತಿ] ಪ್ರಕಟಿಸಿರುವ ಇವರ ಸಂಕಲನಗಳಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಶಾರದಾರಾಮಲಿಂಗಪ್ಪದತ್ತಿ ಪ್ರಶಸ್ತಿ,  ಡಾ. ಬೆಟಗೇರಿ ಕೃಷ್ಣಶರ್ಮ ಕಾವ್ಯ ಪ್ರಶಸ್ತಿ ಮತ್ತು ಕರ್ನಾಟಕ ಲೇಖಕಿಯರ ಸಂಘದ ಪ್ರಶಸ್ತಿಗಳು ಲಭಿಸಿವೆ. ಆಯತಪ್ಪಿ ಫಳಾರನೇ ಕೆಳಗುರುಳಿದಾಗ; ಬಿದ್ದರೂ, ಗುದ್ದಿದರೂ ಲೋಹದ ಹಣತೆ ನೆಗ್ಗಬಹುದು, ಮತ್ತೆದ್ದು ನಗಲೂಬಹುದು ಆದರೆ  ಚೂರಾದದ್ದು ಮೆದು ಮೈಯ  ಮಣ್ಣಹಣತೆ ಎಂದೂ ಈ ಕವಿಗೆ ಗೊತ್ತಿರುವ ಕಾರಣಕ್ಕೇ ಇವರ ಪದ್ಯಗಳು ಅನುಭವ ವಿಸ್ತರಣದ ಚೌಕಟ್ಟಿನಾಚೆಗೆ ಉಕ್ಕದೇ ಹಾಗೆಯೇ ಸೀಮಿತ ವ್ಯಾಸದ ಪರಿವೃತ್ತದೊಳಗಿದ್ದೂ ಒತ್ತಡದ ಹೇರನ್ನು ನಿಭಾಯಿಸುವ ಪರಿ ಅಪರೂಪದ್ದಷ್ಟೇ ಅಲ್ಲ ಅದು ನಿಜ ಬದುಕಿನಲ್ಲೂ ಹೆಣ್ಣು ಅಡವಳಿಸಿಕೊಳ್ಳಲೇ ಬೇಕಾದ ಸಹಜ ದಾರಿಯೂ ಆಗಿದೆ. ಇಂಥ ಚಿಂತನೆಯ ಮುಂದುವರೆದ ಶೋಧವಾಗಿ ಒಂದಿಷ್ಟು ಆಚೀಚೆ ಜರುಗಿಸಹೋದರೂ ಕೈಗೆ ಹತ್ತಿದ ಕಬ್ಬಿಣದ ಮುಳ್ಳು ರಕ್ತ ಬಸಿಯಿತು… ಅಂದಿನಿಂದ ಬೇಲಿಯಲ್ಲಿ ಚಿಗುರ ಕಾಣುವ ಕನಸೂ ಕುಸಿಯಿತು.. ಎಂದು ಈ ಕವಿ “ಬೇಲಿಗಳು” ಎನ್ನುವ ಕವಿತೆಯಲ್ಲಿ ಒಟ್ಟೂ ನಾಶವಾಗುತ್ತಲೇ ಇರುವ ಸಂಬಂಧಗಳನ್ನು ಬೇಲಿಯೆಂಬ  ಪ್ರತಿಮೆಯ ಮೂಲಕವೇ ವಿಷಾದಿಸುತ್ತಾರೆ. ಪದಗಳೊಂದಿಗೆ ನಾನು ಎನ್ನುವ ಕವಿತೆಯಲ್ಲಿ ಪದಗಳೆಂದರೆ ನನಗೆ ಅಚ್ಚುಮೆಚ್ಚು ದಿನಂಪ್ರತಿಯ ಅಭ್ಯಾಸವೂ ಪದಗಳ ಹೊಸೆಯುವುದರಲ್ಲಿ, ಮಸೆಯುವುದರಲ್ಲಿ: ಆದರೆ ಆ ಪದಗಳಿಗೆ ಶಬ್ದಕೋಶದಿ ಅರ್ಥಗಳ ಹುಡುಕಿ ಸೋತಿದ್ದೇನೆ. ಎಂದು ಶಬ್ದಾಡಂಬರದ ವೈಯಾರವನ್ನು ಶಬ್ದಗಳು ಶಬ್ದ ಮಾಡುವ ಪರಿಯನ್ನು ಅರುಹುತ್ತಲೇ ಪದಗಳೆಂದರೆ ನನಗೆ ಅಲರ್ಜಿ ನನ್ನೊಳಗಿನ ನನ್ನನ್ನು ಹೊರಗಟ್ಟಿ ಅಣಕಿಸಿ ನಗುತ್ತವೆ. ಹಾಡಾಗುವ ಬದಲು ಹಾವಾಗಿ ಹಗೆಯ ಹೊಗೆ ಹಬ್ಬಿಸುತ್ತವೆ ಪದಗಳೆಂದರೆ ನನಗೆ ಅಲರ್ಜಿ ಪಟ್ಟಾಂಗದಲ್ಲಿ ಪದಗಳ ಭರ್ಜರಿ ಬೇಟೆಯಾಡುವ ನಾನು ಕಾರ್ಯಹೀನ ಕೆಲಸಗೇಡಿಯಾಗುತ್ತೇನೆ. ಎನ್ನುವಾಗ ಹುಟ್ಟಿದ ದ್ವಿತ್ವವನ್ನು ಕಾಣಿಸುತ್ತಾರೆ. ಒಮ್ಮೆ ಹಿತವಾದದ್ದು ಮುಂದಿನ ಕ್ಷಣದಲ್ಲೇ ಬೇಡವೆಂದೆನಿಸುವ ಮನುಷ್ಯನ ಮಿತಿಯನ್ನು ಈಪದ್ಯ ಹೇಳುತ್ತಿದೆಯೋ ಅಥವ ಕವಿಯು to be or not to be ಎಂಬ ಗೊಂದಲದ ದ್ವಂದ್ವ ಮೀರದ ambiguity ಯೆಂಬ ಪಾಶ್ಚಿಮಾತ್ಯರ ಕಾವ್ಯ ಮೀಮಾಂಸೆಯ ಪ್ರತಿಪಾದಕರಾಗಿಯೂ ಕಾಣುತ್ತಾರೆ. ಹಾಗೆಂದು ಈ ಕವಿ ಬರಿಯ ಒಣ ತರ್ಕ ಮತ್ತು ಸಿದ್ಧಾಂತಗಳ ಗೋಜಲಲ್ಲೇ ನರಳದೆ ಅಪರೂಪಕ್ಕೆ ಈ ಮಳೆಗೂ ಕರುಣೆಯಿಲ್ಲ ಹಸಿಮನಗಳಲಿ ಹುಸಿ ಬಯಕೆಗಳ ಕುದುರಿಸಿ ಕಾಡುತ್ತದೆ ಎಂದೂ ಒಲವನ್ನು ಕುರಿತು ಧೇನಿಸುತ್ತಲೇ ಆ ಹುಡುಗನಿಗೆ ಇದೆಲ್ಲವನೂ ಹೇಗೆ ಉಲಿಯಲಿ? ಕಂಪು ಹೆಚ್ಚಾಗಿ ಜೋಂಪು ಹತ್ತಿದೆ, ಕಣ್ಣುಗಳು ಮತ್ತೇರಿ ಪಾಪೆಯೊಳಗೆ ಮುದುರಿದೆ ಕಣ್ಣ್ಗತ್ತಲ ಗುಹೆಯಲ್ಲಿ ಮಿಣುಕು ಹಚ್ಚುವ ನಿನ್ನ ಬಿಂಬವ ಹೇಗೆ ಮರೆಮಾಚಲಿ ಹುಡುಗ? ಎಂದು ರೊಮ್ಯಾಂಟಿಕ್ ಮೂಡಿನಲ್ಲಿ ಕೇಳುತ್ತಾರಲ್ಲ ಆಗ ಆ ಪದ್ಯ ಮು(ಹು)ಟ್ಟಿಸಿದ ಬಿಸಿಯನ್ನು ಓದುಗ ಸುಲಭದಲ್ಲಿ ಮರೆಯಲಾರ!! ಈ ಮುದುಕಿಯರೇ ಹೀಗೆ ಮನೆಯ ಸಂದುಹೋದ ಬಣ್ಣಕ್ಕೆ ಸಾಕ್ಷಿಯಾಗುತ್ತಾರೆ…. ಎಂದೆನುವ ಪದ್ಯದ ಶೀರ್ಷಿಕೆ ಈ ಹಿಂದೆ ಇದೇ ಶೀರ್ಷಿಕೆಯಲ್ಲಿ ಪ್ರತಿಭಾ ನಂದಕುಮಾರ ಪದ್ಯವಾಗಿಸಿದ್ದನ್ನು ಓದಿದ್ದವರಿಗೆ ಸಪ್ಪೆ ಎನಿಸುವುದು ಸುಳ್ಳೇನಲ್ಲ. ದೇಹವೊಂದು ಪದಾರ್ಥವಾಗದೇ ಕಲ್ಪಿತ ಭ್ರಮೆಗಳಲ್ಲಿ ಹುಟ್ಟುವ ಅವನನ್ನು ಆವಾಹಿಸಿಕೊಳ್ಳುತ್ತಾಳೆ ಆಘ್ರಾಣಿಸುತ್ತಾಳೆ, ಬಿಚ್ಚಿ ಹರಹಿದ ಹೆರಳುಗಳ ನಡುವೆ ಬಂಧಿಸುತ್ತಾಳೆ ಪರವಶಳಾಗುತ್ತಾಳೆ ಅವಳು ಅವನಿಲ್ಲದೇ ಅವಳ ದೇವರು ಇರುವುದಾದರೂ ಹೇಗೆ? ಆ ದೇವನಿಗಾಗಿ ಕಾಯುತ್ತಾಳೆ ಅವಳು ಕಾಯತ್ತಲೇ ಇರುತ್ತಾಳೆ ಅವಳು. ಎನ್ನುವ ತುಂಬು ಭರವಸೆಯ ಈ ಕವಿ ಒಂದೇ ಧಾಟಿಯಲ್ಲಿ ಬರೆದುದನ್ನೇ ಬರೆಯುತ್ತಿರುವವರ ನಡುವೆ ವಿಭಿನ್ನತೆಯನ್ನೇ ಮುಖ್ಯ ಸ್ಥಾಯಿಯಾಗಿರಿಸಿಕೊಂಡ ಮತ್ತು ಮಹಿಳಾ ಕಾವ್ಯ ಎನ್ನುವ ಹೆಸರಲ್ಲಿ ಹಾಕಿಕೊಂಡಿದ್ದ ಬೇಲಿಯನ್ನು ಸರಿಸಿ ಆ ಅದೇ ಮಹಿಳಾ ಕಾವ್ಯವು ಸಂಕೀರ್ಣತೆಯನ್ನು ಮೀರಿದ ಅನುದಿನದ ಅಂತರಗಂಗೆಯ ಗುಪ್ತಗಾಮಿನೀ ಹರಿವಿನ ವಿಸ್ತಾರ ಮತ್ತು ಆಳದ ಪ್ರಮಾಣವನ್ನು ಗುರ್ತಿಸುತ್ತಾರೆ. “ತರಗೆಲೆ” ಶೀರ್ಷಿಕೆಯ ಪದ್ಯವೇ ಈ ಕವಿಯು ನಂಬಿರುವ  ಒಟ್ಟೂ ಜೀವನ ಮೌಲ್ಯವನ್ನು ಪ್ರತಿನಿಧಿ ಸುತ್ತಿ ದೆ. ಆ ಸಾಲು ಹಾರುವ ಪುಟ್ಟ ಗುಬ್ಬಿಯ ಬಾಯೇರಿ ಮೊಟ್ಟೆಗೆ ಮಂದರಿಯಾಗಿ, ಪುಟಪುಟ ನೆಗೆತದ ಮರಿಗುಬ್ಬಿಗಳ ಕಾಲಡಿಗೆ ರೋಮಾಂಚನಗೊಳ್ಳಬೇಕು ಚಿಲಿಪಿಲಿಯೂದುವ ತೊದಲು ನುಡಿಗಳಿಗೆ ಕಿವಿಯಾಗಬೇಕು. ಜೀವವಿಲ್ಲದ ಒಣ ಎಲೆಯೆಂದವರ ಕಡೆಗೊಮ್ಮೆ ನಲ್ಮೆಯ ನಗೆ ಬೀರಬೇಕು ಇಂಥ ಭಾವ ಭಿತ್ತಿಯ ಮತ್ತು ಹುಚ್ಚು ಆದರ್ಶಗಳಿಲ್ಲದ ಇದ್ದುದನ್ನೇ ಸರಿಯಾಗಿ ಸ್ಪಷ್ಟವಾಗಿ ಸದುದ್ದೇಶದ ಚಿಂತನೆಯ ಈ ಕವಿಯ ಐದು ಕವಿತೆಗಳ ಪೂರ್ಣ ಪಾಠ ನಿಮ್ಮ ಓದಿಗೆ ಶಿಫಾರಸು ಮಾಡುತ್ತೇನೆ. —————————————————————————————– ೧. ಎದೆ ಬೆಳಕು ಮತ್ತು ಕಣ್ಣ ಕಾಡಿಗೆ ನಿನ್ನ ಉತ್ತರೀಯಕ್ಕೆ ಅರಿವಿಲ್ಲದೇ ಬಳಿದ ನನ್ನ ಕೆಂಪು ತುಟಿರಂಗು ಇನ್ನೂ ಹಸಿಹಸಿ ಆಗಿಯೇ ಇದೆ ಇಳಿಸಂಜೆಗೆ ಹಬ್ಬಿದ ತೆಳು ಮಂಜಿನಂತಹ ಹುಡುಗ ಮಸುಕಾಗದ ಕನಸೊಂದು ಕಣ್ಣಲ್ಲೇ ಕಾದು ಕೂತಿದೆ ನೀನೊಲಿದ ಮರುಗಳಿಗೆ ಭವದ ಹಂಗು ತೊರೆದೆ ಮುಖ ನೋಡದೇ ಮಧುರಭಾವಕ್ಕೆ ಮನನೆಟ್ಟು ಒಳಹೃದಯದ ಕವಾಟವ ಒಪ್ಪಗೊಳಿಸಿ ಮುಗ್ಧಳಾದೆ ಈಗ ನೆನಪುಗಳ ಮುದ್ದಾಡುತ್ತಿರುವೆ ಮುದ್ದು ಹುಡುಗ, ನಿನ್ನ ಒಲವಿಂದ ಬರಡಾದ ಒರತೆಗೂ ಹಸಿಹಸಿ ಬಯಕೆ ಒಣಗಿದ ಎದೆಗೂ ಲಗ್ಗೆ ಇಡುವ ಹನಿ ಜಿನುಗಿನ ಕುಪ್ಪಳಿಸುವಿಕೆ ಗೊತ್ತೇ ನಿನಗೆ? ಈ ತಂಗಾಳಿಯೂ ತೀರದ ದಿಗಿಲು ಹತ್ತಿಸಿಕೊಂಡ ಏಕಾಂಗಿ ಮೃಗದಂತೆ ಸುಂಯ್ಯನೇ ಹಾಗೇ ಬಂದು ಹೀಗೆ ಹೊರಟುಹೋಗುತ್ತದೆ ಮರೆತ ಕನಸುಗಳಿಗೆ ಕಡ ಒದಗಿಸಿ ಬೆನ್ನು ಹತ್ತುತ್ತದೆ ಈ ಮಳೆಗೂ ಕರುಣೆಯಿಲ್ಲ ಹಸಿಮನಗಳಲಿ ಹುಸಿ ಬಯಕೆಗಳ ಕುದುರಿಸಿ ಕಾಡುತ್ತದೆ ಇದೆಲ್ಲವನೂ ಹೇಗೆ ಉಲಿಯಲಿ? ಕಂಪು ಹೆಚ್ಚಾಗಿ ಜೋಂಪು ಹತ್ತಿದೆ, ಕಣ್ಣುಗಳು ಮತ್ತೇರಿ ಪಾಪೆಯೊಳಗೆ ಮುದುರಿದೆ ಕಣ್ಣ್ಗತ್ತಲ ಗುಹೆಯಲ್ಲಿ ಮಿಣುಕು ಹಚ್ಚುವ ನಿನ್ನ ಬಿಂಬವ ಹೇಗೆ ಮರೆಮಾಚಲಿ ಹುಡುಗ? ನೀನಾದರೋ ಭೂವ್ಯೋಮಗಳ ತಬ್ಬಿ ನಿಂತ ಬೆಳಕ ಕಿರಣ ಕಣ್ಣ ಕಾಡಿಗೆಯ ಕಪ್ಪು, ಅದಕ್ಕೆ ಎದೆಯೊಳಗೆ ಬೆಳಕ ಹಚ್ಚಿದೆ, ಕಣ್ಣ ಮುಂದೆ ಇಲ್ಲದೆಯೂ ಕಣ್ಣ ಕಾಡಿಗೆಗೆ ಬಣ್ಣ ಬಳಿದೆ. ಮುದ್ದು ಹುಡುಗ, ಹೀಗಾಗೇ ದಿನಗಳೆದಂತೆ ನನ್ನ ಕಣ್ಣ ಕೆಳಗಡೆ ಕಪ್ಪು ಬರೀ ಕಪ್ಪು ೨.  ಶತಶತಮಾನಗಳ ತಲೆಬರಹ ತಪ್ಪುವ ಹಾದಿಗಳ ಗುಂಟ ಅರಿವಿನ ಸೂಡಿ ಸಿಗಬಹುದೇ ಎಂದು ಕಾಯುತ್ತಲೇ ಇದ್ದಾರೆ ಜನ ದಂಧುಗಗಳ ಸಾಲೇ ಸಾಲು ಎದುರಾಗುತ್ತ ಬೇಸತ್ತ ಮನಸ್ಸುಗಳು ಒಂದನ್ನೊಂದು ಹದತಪ್ಪುತ್ತಲೇ ಬದುಕ ಹದಕ್ಕೆ ಕಾಯಿಸಿಕೊಳ್ಳುವ ಕನಸು ನನಸಾಗದ ಹಾದಿಯ ಮೇಲೆ ಸೌಧಕಟ್ಟುತ್ತಿದ್ದಾರೆ ಶತಶತಮಾನಗಳಿಂದ ಜನ ಹಾವಿನ ಹಾದಿಯನ್ನು ಹೂವೆಂದುಕೊಂಡು ನಂಜಿಗೆ ಬಲಿಯಾಗುತ್ತಿದ್ದಾರೆ ಜನ ಮಧ್ಯದ ಕಡಲಿಗೆ ಮುಗಿಬಿದ್ದು ಮದ್ದೆ ಸಿಗದೇ ಮಾರಿಕೊಂಡ ಮನಸ್ಸಿನ ಕೂಪದೊಳಗಿನ ನೆನಪುಗಳ ಒಂದೊಂದಾಗಿ ಗೋರಿಯೊಳಗೆ ಹೂತು ಹಾಕುತ್ತಲೇ ಮರೆತು ಅದನ್ನೆ ಎದೆಯ ಹಾಡಾಗಿಸಿಕೊಳ್ಳುತ್ತಿದ್ದಾರೆ ಶತಶತಮಾನಗಳಿಂದ ಜನ ಯಾವ ಎತ್ತರಕ್ಕೆ ಏರಿದರೂ ಜಾರುವ ಭಯದಲ್ಲಿಯೇ ಬಸವಳಿಯುತ್ತಾರೆ ಜನ ಬೆಳಕನ್ನು ಮುತ್ತಿಕ್ಕುವ ಆಸೆಗೆ ಬಲಿಬಿದ್ದು ಕೈತಪ್ಪಿ ಬೆಂಕಿಯನ್ನು ಅಪ್ಪಿ ಸುಟ್ಟಗಾಯದ ನೋವಿಗೆ ಮುಲಾಮು ಹಚ್ಚುತ್ತ ಮುಲುಗುಡುತ್ತಿದ್ದಾರೆ ಜನ ಪರಂಪರೆಯ ಮೊರದಲ್ಲಿ ಬದಲಾವಣೆಯ ಅಕ್ಕಿ ಆರಿಸುತ್ತಾ ಕಸವರವನ್ನು ಕಸವೆಂದು ತೆಗೆತೆಗೆದು ಚೆಲ್ಲುತ್ತಿದ್ದಾರೆ ಜನ ನೆಮ್ಮದಿಯ ಹುಡುಕುತ್ತಾ ದೇಗುಲಗಳ ಘಂಟೆಗಳ ಬಾರಿಸುತ್ತ ಪರಮಾತ್ಮ ಎನ್ನುತ್ತ ಪಂಥಗಳ ಕಟ್ಟಿಕೊಳ್ಳುತ್ತಲೇ ನಡೆದಿದ್ದಾರೆ ಶತಶತಮಾನಗಳಿಂದ ಜನ ೩. ಗುಪ್ತಗಾಮಿನಿ ಅಲ್ಪ ನುಡಿಯಲ್ಲಿ ತತ್ವ ವಿಚಾರ ಪುರಾಣಗಳ ಪಠಣ, ನಿತ್ಯ ವಾಚನ ವಾಚಾಳಿತನವಿಲ್ಲ-ವಚನ ಬಲು ಭಾರ ಮಿತ ಭಾಷಿ ನಾನೆಂಬ ಕೀಟಕೊರೆತ-ಮೆದುಳು ಊತ ಎಲ್ಲ ದುರ್ಗಮ ದಾರಿ ಕ್ರಮಿಸಿ ಬಂದಿಹೆ ಏರುವ ಮೊದಲು ಗದ್ದುಗೆ ನನಗಾರು ಸಮನಿಲ್ಲ ನನ್ನಿಂದಲೆ ಎಲ್ಲ ಸರ್ವಥಾ ಸಲ್ಲ ಅಲ್ಲೂ ವಾಸನೆ ನಾ ಸರಳ, ಸಜ್ಜನ ನೀತಿ ನೇಮಗಳ ಪರಿಪಾಲಕ, ಸತ್ಯ ಶಾಂತಿಗಳ ಪೂಜಕ, ಎನಗಿಂತ ಹಿರಿಯರಿಲ್ಲ ನನ್ನಂತೆ ಯಾರಿಲ್ಲ, ಕನವರಿಕೆ ಬೇರೆನಿಲ್ಲ, ಒಳಬೆರಗು-ಅದೇ ಯಾವ ಧನ್ವಂತರಿಯ ಬಳಿಯಿಲ್ಲ ಮದ್ದು ಬಿಳಿಯ ಜುಬ್ಬದ ಒಳಗೆ ಕರಿಯ ಕೋಟಿನ ಗುಂಡಿಯಲ್ಲಿ ರೇಷ್ಮೇ ಮಕಮಲ್ಲಿನ ನುಣುಪಲ್ಲಿ ಸದ್ದಿಲ್ಲದೇ ಠೀಕಾಣಿ ಜರಡಿ ಹಿಡಿದರೂ ಜಾರದಂತೆ ಅಂಟಿಕೂತಿದೆ ನಾನು ಹೋದರೆ ಹೋದೇನು ಕನಕನಿಗಾದ ಉದಯಜ್ಞಾನ ನಮಗೇಕಿಲ್ಲ ಬಿಡು ಆ ಹಂತ ಏರಿಲ್ಲ ಆ ಮರ್ಮ ಸರಳಿಲ್ಲ. ೪. ಪದಗಳೊಂದಿಗೆ ನಾನು ಪದಗಳೆಂದರೆ ನನಗೆ ಅಚ್ಚುಮೆಚ್ಚು ದಿನಂಪ್ರತಿಯ ಅಭ್ಯಾಸವೂ ಪದಗಳ ಹೊಸೆಯುವುದರಲ್ಲಿ, ಮಸೆಯುವುದರಲ್ಲಿ: ಆದರೆ ಆ ಪದಗಳಿಗೆ ಶಬ್ದಕೋಶದಿ ಅರ್ಥಗಳ ಹುಡುಕಿ ಸೋತಿದ್ದೇನೆ. ಹೊಸ ಹಾಡಿಗೆ ಕುಣಿದಾಡುವ ನವಿಲುಗಳ ದಾರಿ ಕಾಯುತ್ತ, ನಾನೇ ನವಿಲಾಗಬಯಸುತ್ತೇನೆ. ಮತ್ತೆ ಕುಕಿಲದ ಗಾನಕ್ಕೆ ಪದ ಜೋಡಿಸಿ ಶ್ರುತಿ ಕೂಡಿಸಿ ಹಾಡಾಗ ಬಯಸುತ್ತೇನೆ. ಪದಗಳು ಪರಾರಿಯಾಗುತ್ತವೆ ಆಗೊಮ್ಮೆ ಈಗೊಮ್ಮೆ ಸುಳಿವುಕೊಡದೆ, ಪಕ್ಕಾ ಪರದೇಶಿಯಂತೆ. ಹಳಹಳಿಸಿ ನೋಡುತ್ತೇನೆ: ಪದಗಳ ಜೋಡಿಸಿ ಇಡಲಾಗದ್ದಕ್ಕೆ. ನಡುರಾತ್ರಿಯಲ್ಲಿ ಕಂದೀಲ ಬೆಳಕಿನಲ್ಲಿ ನಡಗುವ ಕೈಗಳು ಆಡಿಯಾಡುತ್ತವೆ ಕೆತ್ತಿದ ಪದಗಳ ಮೇಲೆ, ಕಂಗಳಿಂದ ಉದುರಿದ ಮುತ್ತೊಂದು ಕರ ಸೋಕಿದಾಗ ಎಚ್ಚರ ಗೊಳ್ಳುತ್ತ ಸಡಿಲವಾಗಿಲ್ಲ ಎಲ್ಲಪದಗಳು ಅವಕ್ಕೆ ಸಂದೂಕದ ಪೆಟ್ಟಿಗೆಯಲ್ಲಿಟ್ಟು ಕಾಪಿಡು ಎನ್ನುತ್ತದೆ ಮನಸ್ಸು. ಪದಗಳೆಂದರೆ ನನಗೆ ಅಲರ್ಜಿ ನನ್ನೊಳಗಿನ ನನ್ನನ್ನು ಹೊರಗಟ್ಟಿ ಅಣಕಿಸಿ ನಗುತ್ತವೆ. ಹಾಡಾಗುವ ಬದಲು ಹಾವಾಗಿ ಹಗೆಯ ಹೊಗೆ ಹಬ್ಬಿಸುತ್ತವೆ ಪದಗಳೆಂದರೆ ನನಗೆ ಅಲರ್ಜಿ ಪಟ್ಟಾಂಗದಲ್ಲಿ ಪದಗಳ ಭರ್ಜರಿ ಬೇಟೆಯಾಡುವ ನಾನು ಕಾರ್ಯಹೀನ ಕೆಲಸಗೇಡಿಯಾಗುತ್ತೇನೆ. ಪದಗಳೆಂದರೆ ಅಚ್ಚುಮೆಚ್ಚು ಅಲರ್ಜಿ ನನಗೆ ಪರಪರನೆ ಕೆರೆದುಕೊಳ್ಳುವ ಚಟವಿದ್ದ ಹಾಗೆ. ೫. ಹುಡುಕಿ ಕೊಡು ಅವಳ ಮಾಂಸ ಮಜ್ಜೆಯ ನೆರಳು, ಮುಟ್ಟಿನ ವಾಸನೆಬಡಿಯದೇ, ಪೊಗರಿದ ಅವನೆಂಬವನ  ಹುಡುಕಿ ಸೋತಿದ್ದೇನೆ, ಹುಡುಕಿ ಕೊಡು ಹೇ! ಪ್ರಭು. ಒಡಲ ಮಾಂಸದ ಹೊದಿಕೆಯೊಳಗೆ ಜೀವವ ಹದವಾಗಿ ಕಾಪಿಟ್ಟು ಅವನುಸಿರ ಹಸಿರ ಮಾಡಿ ಹಣ್ಣಾದವಳು ರಕ್ತ ಹೀರಿದ ಬಟ್ಟೆಯ ಹಿಂಡಿ ನಿಂತವಳ ಸೆರಗು ಹಿಡಿದು ಕಾಡಿದವನ ಎದೆಗವುಚಿಕೊಂಡವಳು ಮಾಂಸಕಲಶದ ತೊಟ್ಟು ಬಾಯಿಗಿಟ್ಟೊಡನೆ ಕಿರುನಕ್ಕು ಕಣ್ಣುಮಿಟುಕಿಸಿದವನ ಲೊಚಲೊಚ ರಕ್ತ ಹೀರುವವನ ಕಣ್ಣೊಳಗೆ ತುಂಬಿಸಿಕೊಂಡವಳು ಅವಳಿಲ್ಲದೇ ಜಗದ ಬೆಳಕಿಗೆ ಕಣ್ಣು

Read Post »

ಇತರೆ, ಜೀವನ

ಅಂಕಣ ಬರಹ–02 ಶಾಂತಿ ವಾಸು ಹೋದ ಅಂಕಣದಲ್ಲಿ ರೇಡಿಯೋ ನಮ್ಮ ಜೀವನವನ್ನು ಆಕ್ರಮಿಸಿದ ಕಾಲ ಹಾಗೂ ರೀತಿಯನ್ನು ನೋಡಿದೆವು. ನಮ್ಮನ್ನು ಆಧುನಿಕ ಕಾಲದ ಪ್ರತಿನಿಧಿಗಳನ್ನಾಗಿಸಿದ ರೇಡಿಯೋ ಬಗ್ಗೆ ಈಗ ಇನ್ನಷ್ಟು ವಿಷಯಗಳನ್ನು ತಿಳಿಯೋಣ ಬನ್ನಿ. ಸಂಶೋಧನೆಗಾಗಿ ನೋಬಲ್ ಪ್ರಶಸ್ತಿ ಪಡೆದ ಇಟಲಿಯ  ಗೂಗ್ಮಿಯೆಲ್ಮೋ ಮಾರ್ಕೋನಿಯಿಂದ 1885 ರಲ್ಲಿ ತಂತಿರಹಿತ ಸಂದೇಶ ರವಾನಿಸುವ ಮೂಲಕ ಕಂಡುಹಿಡಿಯಲ್ಪಟ್ಟ ರೇಡಿಯೋ ಎಂಬ ಒಂದು ಅದ್ಭುತವನ್ನು ಭಾರತಕ್ಕೆ ಕೊಡುಗೆಯಾಗಿ ನೀಡಿದ ಭೌತವಿಜ್ಞಾನಿ, ಪ್ರಕಾಶ ಶಾಸ್ತ್ರ, ಸಸ್ಯ ಜೀವಶಾಸ್ತ್ರ, ದೂರಸಂಪರ್ಕ ಹಾಗೂ ರೇಡಿಯೋ ವಿಜ್ಞಾನಿ ಸರ್. ಜಗದೀಶ್ ಚಂದ್ರ ಬೋಸ್ ಅವರ ಕೊಡುಗೆ ರೇಡಿಯೋ ಹಾಗೂ ದೂರ ಸಂಪರ್ಕದ ಬೆಳವಣಿಗೆಯಲ್ಲಿ ಅತ್ಯಂತ ಮಹತ್ತರವಾದದ್ದು. ಭಾರತ ಕಂಡ ಶ್ರೇಷ್ಠ ವಿಜ್ಞಾನಿಗಳಲ್ಲಿ ಒಬ್ಬರಾದ ಹಾಗೂ ತಮ್ಮ ಸಂಶೋಧನೆಗಳಿಗೆ ಅಗತ್ಯವಾದ ಉಪಕರಣಗಳನ್ನು ತಾವೇ ಸ್ವತಃ ಕಂಡು ಹಿಡಿದುಕೊಂಡಿದ್ದ ಮಹಾಜ್ಞಾನಿ, ಅಧ್ಯಾತ್ಮ ಚಿಂತಕ, ನಮ್ಮ ಭಾರತದ ಹೆಮ್ಮೆಯ ಪುತ್ರ “ಜ್ಞಾನ ಯಾರ ಸ್ವತ್ತೂ ಅಲ್ಲ. ಅವರವರ ಶ್ರಮದ ಪ್ರತಿಫಲ ಅವರವರಿಗೆ” ಎಂದು ಜಗತ್ತಿಗೆ ಸಾರಿದ, ಪ್ರತಿಷ್ಠಿತ ನೈಟ್ ಹುಡ್ ಪ್ರಶಸ್ತಿಯೊಂದಿಗೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿ, ಕಲ್ಕತ್ತಾದಲ್ಲಿ “ಬೋಸ್ ಇನ್ಸ್ಟಿಟ್ಯೂಟ್” ಆರಂಭಿಸಿದ ನಮ್ಮ ಭಾರತದ ಹೆಮ್ಮೆಯ ಸಸ್ಯ ವಿಜ್ಞಾನಿ ಇವರು ಎಂಬುದು ಹೆಮ್ಮೆ ಪಡತಕ್ಕ ವಿಷಯ. ರೇಡಿಯೋದ ಕಾರ್ಯವಿಧಾನ, ಉಪಯೋಗಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಸಲುವಾಗಿ 1932ರಲ್ಲಿ ಮಂಗಳೂರಿನ ವಿದ್ವಾನ್. ಹೊಸಬೆಟ್ಟು ರಾಮರಾವ್ ಅವರು “ಆಕಾಶವಾಣಿ” ಎಂಬ ಹೆಸರಿನ ಸುಮಾರು 20 ಪುಟಗಳ ಒಂದು ಪುಸ್ತಕವನ್ನು ಬರೆದಿದ್ದರು . ಮೈಸೂರು ವಿಶ್ವವಿದ್ಯಾನಿಲಯದ ಮನಃಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾಕ್ಟರ್ ಎಂ.ವಿ.ಗೋಪಾಲಸ್ವಾಮಿಯವರು ದೇಶಕ್ಕೆ ಹೊಸತನ್ನು ಪರಿಚಯಿಸುವ ಸಲುವಾಗಿ ಲಂಡನ್ನಿನಿಂದ ಕಡಿಮೆ ವಿದ್ಯುತ್ ಬಳಕೆಯ “ಟಾಲ್” ಎಂಬ ಟ್ರಾನ್ಸಮೀಟರನ್ನು ತಂದು 1935 ಸೆಪ್ಟೆಂಬರ್ 10ರಂದು, ರಾಷ್ಟಕವಿ ಕುವೆಂಪುರವರಿಂದ ಕವನವಾಚನ ಮಾಡಿಸುವ ಮೂಲಕ ಭಾರತ ದೇಶದ ಮೊದಲ ಬಾನುಲಿ ಕೇಂದ್ರವನ್ನು ಮೈಸೂರಿನ ತಮ್ಮ ವಿಠ್ಠಲವಿಹಾರ ಮನೆಯಲ್ಲಿ ಸ್ಥಾಪಿಸಿದರು. ಆಗಿನ ಮೈಸೂರಿನ ಮಹಾರಾಜರು ಸ್ವತಃ ಕಾಲೇಜಿನ ಅಸೆಂಬ್ಲಿಯಲ್ಲಿ ಹಾಜರಿದ್ದು ಅದನ್ನು ಆಲಿಸಿದ್ದರು ಎಂಬುದು ವಿಶೇಷ. ಬಾನಿನಿಂದ ತರಂಗಗಳು ಹೊತ್ತು ತಂದ ಉಲಿಯನ್ನು ರೇಡಿಯೋದಲ್ಲಿ ಕೇಳಬಹುದಾದ ಅದ್ಭುತವನ್ನು ಅಂದಿನ ಮೈಸೂರು ಆಕಾಶವಾಣಿ ಸಹಾಯಕ ನಿರ್ದೇಶಕ, ಸಾಹಿತಿ ನಾ. ಕಸ್ತೂರಿಯವರು “ಆಕಾಶವಾಣಿ” ಎಂದು ಕರೆದರು. ಭಾನುವಾರ ಹೊರತು ಪಡಿಸಿ, ಮಿಕ್ಕ ದಿನಗಳಲ್ಲಿ ಶಾಸ್ತ್ರೀಯ ಸಂಗೀತ ಹಾಗೂ ಬಾನುಲಿ ಭಾಷಣವನ್ನು ಪ್ರಸಾರ ಮಾಡುತ್ತಿದ್ದ ಬಾನುಲಿ ಕೇಂದ್ರವನ್ನು ಸ್ವಾತಂತ್ರ್ಯಾ ನಂತರ ಅಂದರೆ 1950 ರಲ್ಲಿ ಸಂವಿಧಾನ ಅಳವಡಿಕೆಯೊಂದಿಗೆ ದೇಶದ ಎಲ್ಲ ಪ್ರಸಾರ ಸೇವೆಗಳನ್ನು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡಿಸಲಾಯಿತು. ಹಾಗೂ 1956 ರಲ್ಲಿ ಕೇಂದ್ರಸರ್ಕಾರವು “ಆಕಾಶವಾಣಿ” ಎಂಬ ಹೆಸರನ್ನೇ ಅಧಿಕೃತವಾಗಿ ಘೋಷಣೆ ಮಾಡಿತು. ದಾಖಲೆಗಳ ಪ್ರಕಾರ 1954 ರಲ್ಲಿ ಭಾರತದ ಮೊದಲ ವ್ಯಾಪಾರಿ ರೇಡಿಯೋ ಅಂದರೆ ಆಂಟೆನೋ ಇದ್ದ ಕಮರ್ಷಿಯಲ್ ಟ್ರಾನ್ಸಿಸ್ಟರ್  ಮಾರಾಟವಾಯಿತು. ಇದನ್ನು ಹೋದ ಕಡೆಯಲ್ಲೆಲ್ಲ ಹೊತ್ತು ಹೋಗಬಹುದಾದರಿಂದ, ಹಾಗೂ ದರದ ದೃಷ್ಟಿಯಿಂದ ಅಗ್ಗವಾಗಿದ್ದ ಟ್ರಾನ್ಸಿಸ್ಟರ್ ಎಂಬುದು ಆ ದಿನಗಳಲ್ಲಿ ಒಂದು ಮನರಂಜನಾ ವಸ್ತುವಾಗಿ ಬಹುದೊಡ್ಡ ಮಾರುಕಟ್ಟೆಯೊಂದಿಗೆ ಬಹು ಜನಪ್ರಿಯತೆಯ ಕೇಂದ್ರ ಬಿಂದುವಾಯಿತು. ಪೂರ್ಣ ಪ್ರಮಾಣದಲ್ಲಿ ವಾಣಿಜ್ಯ ದೃಷ್ಟಿಯಿಂದ ಆರಂಭವಾದ ರೇಡಿಯೋ ಎಂಬ ಆ ಕಾಲದ ಆಧುನಿಕ ತಂತ್ರಜ್ಞಾನವು, ಜಾಹೀರಾತು ಪ್ರಪಂಚಕ್ಕೆ ಭದ್ರವಾದ ಅಡಿಗಲ್ಲನ್ನು ನೆಟ್ಟಿತು. ಜಾಹೀರಾತುಗಳನ್ನು ಕೇವಲ ಕೇಳಬಹುದಾಗಿದ್ದ ಆ ಕಾಲಘಟ್ಟದಲ್ಲಿ ಆಲ್ ಇಂಡಿಯಾ ರೇಡಿಯೋ (A.I.R)ದ ಭಾಗವಾಗಿ 1959ರಲ್ಲಿ ದೂರದರ್ಶನವನ್ನು ಆರಂಭಿಸಲಾಯಿತು. ಇದು ಕೂಡ ವಾಣಿಜ್ಯ ದೃಷ್ಟಿಯಿಂದಲೇ ಸ್ಥಾಪಿತವಾದದ್ದೆಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಹಾಗಾಗಿ ಮೊದಲೇ ಹೇಳಿದ ಜಾಹೀರಾತಿನೊಂದಿಗೆ ದೂರದರ್ಶನದಲ್ಲಿ ಡಾಬರ್ ಚವನ್ ಪ್ರಾಶ್, ನಿರ್ಮಾ ವಾಷಿಂಗ್ ಪೌಡರ್ ವಿಕೋ ಟರ್ಮರಿಕ್ ಕ್ರೀಮ್, ಲಿರಿಲ್ ಸೋಪು ಹಾಗೂ ಸಿಯಾರಾಂ ಸೂಟಿಂಗಿನ ಜಾಹೀರಾತು ಕೂಡ ಸೇರಿಕೊಂಡದ್ದು ಹೌದಲ್ಲವೇ? ಆಗಿನ ಜನರಿಗೆ ಆದ ಹೊಸ ಹೊಸ ಅವಿಷ್ಕೃತ ವಸ್ತುಗಳ ಪರಿಚಯ, ನೋಡುವ ಮುಟ್ಟುವ ಉತ್ಸಾಹ,  ಉಪಯೋಗಿಸುವಾಗಿನ ಪುಳಕ ಈಗೊಂದೂ ಇಲ್ಲ. ಏಕೆಂದರೆ ಕೆಲವೇ ಕೆಲವನ್ನು ಹೊರತುಪಡಿಸಿ ಮಿಕ್ಕೆಲ್ಲವೂ ಆಗಿನದ್ದರ ಸುಧಾರಿತ ವ್ಯವಸ್ಥೆ ಹಾಗೂ ರೂಪಾಂತರ ಅಷ್ಟೇ ಆಗಲೀ ಯಾವುದೂ ಹೊಸತಲ್ಲ.  ಶ್ರೀಸಾಮಾನ್ಯರಿಗಾಗಿಯೇ, ರೇಡಿಯೋಗಳ ನಿಗದಿತ ಕಾರ್ಯಕ್ರಮಗಳ ಏಕತಾನತೆಯನ್ನು ಹೋಗಲಾಡಿಸವ ಸಲುವಾಗಿ, ಸುಧಾರಿತ ಹಾಗೂ ಉತ್ತಮಗುಣಮಟ್ಟದ ಕಾರ್ಯಕ್ರಮ ರೂಪಿಸುವ ಹಾಗೂ ಸರ್ಕಾರದ ವರಮಾನವನ್ನು ಹೆಚ್ಚುಮಾಡುವ ಹೆಚ್ಚು ಸ್ಪಷ್ಟತೆಯ ಎಫ್. ಎಂ (frequency modulation ಆವರ್ತನ ಮಾಡ್ಯುಲೇಶನ್) ಕೇಂದ್ರಗಳು ಸ್ಥಾಪಿತವಾದವು. MHz(ಮೆಗಾಹರ್ಡ್ಜ್) ತರಂಗಾಂತರದ ಮೇಲೆಯೇ ಇಂದಿಗೂ ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತಿರುವ ಎಫ್.ಎಂ. ರೇಡಿಯೋಗಳು ಹಾಗೂ ದೂರದರ್ಶನದ ಹಲವಾರು ಚಾನೆಲ್ಲುಗಳಿಗೆ ಜಾಹೀರಾತುಗಳಿಂದ ಬರುವ ಹಣವೇ ಜೀವಾಳ ಹಾಗೂ ಹಿರಿಮೆ. ********************************************************

Read Post »

ಅಂಕಣ ಸಂಗಾತಿ, ಮುಖಾಮುಖಿ

ಅಂಕಣ ಬರಹ ಮೆಹಬೂಬ್ ಮುಲ್ತಾನಿ ಪರಿಚಯ: ಮೆಹಬೂಬ್ ಮುಲ್ತಾನಿ ಬೆಳಗಾವಿ ಜಿಲ್ಲೆಯ ಖಾನಾಪುರ ‌ತಾಲೂಕಿನ‌ ಚಿಕ್ಕನದಿಕೊಪ್ಪ‌ ಶಾಲೆಯಲ್ಲಿ ‌ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಮಕಾಲಿನ ಓದು ಬರಹ ವೇದಿಕೆ ಕಟ್ಟಿಕೊಂಡು ಸಾಹಿತ್ಯ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಹಿಂದಿ,ಉರ್ದು, ಮರಾಠಿ, ಆಂಗ್ಲ ಭಾಷೆಯ ಸಾಹಿತ್ಯ ಅನುವಾದ, ವಿಶೇಷವಾಗಿ ಕವಿತೆಗಳ ಅನುವಾದ ಇವರ ಇಷ್ಟದ ಕೆಲಸ. ಕವಿತೆ ಬರೆಯಲು ಪ್ರಾರಂಭಿಸಿದ್ದಾರೆ. ತುಂಬಾ ಜೀವನ ಪ್ರೀತಿಯ ಮನುಷ್ಯ ನಮ್ಮ ಮೆಹಬೂಬ್ ಮುಲ್ತಾನಿ ಈ ವಾರದ ಮುಖಾಮುಖಿಯಲ್ಲಿ ಕವಿ ಮೆಹಬೂಬ್ ಮುಲ್ತಾನಿಯನ್ನು ಮಾತಾಡಿಸಿದ್ದಾರೆನಾಗರಾಜ ಹರಪನಹಳ್ಳಿ ” ನನ್ನ ಕವಿತೆಯ ವಸ್ತು ಪ್ರೀತಿ ಮತ್ತು ಧರ್ಮ “ “ ದೇವರು -ಧರ್ಮದಲ್ಲಿ ನನಗೆ ಅಷ್ಟಾಗಿ ನಂಬಿಕೆಯಿಲ್ಲ “ ಕವಿತೆಗಳನ್ನು ಯಾಕೆ ಬರೆಯುತ್ತೀರಿ ? ಕವಿತೆ ಯಾಕೆ ಬರೆಯುತ್ತೇನೆ ಎನ್ನುವುದಕ್ಕೆ ನಿರ್ದಿಷ್ಟ ಉತ್ತರ ಹೇಳಲಾಗದು. ಮನಸ್ಸಿನ ಬೇಗುದಿ ಹೊರಹಾಕಲು ನಾನು ಕವಿತೆಯ ಮೊರೆ ಹೋಗುತ್ತೇನೆ. ಕವಿತೆ ಹುಟ್ಟುವ ಕ್ಷಣ ಯಾವುದು ? ನಿರ್ದಿಷ್ಟ ಸಮಯ ಅಂತೆನೂ ಇಲ್ಲ .ಯಾವುದೋ ಒಂದು ಕ್ಷಣದಲ್ಲಿ ಹೊಳೆದ ಸಾಲುಗಳು ಆಗಾಗ ಕವಿತೆಯ ರೂಪ ತಾಳುತ್ತವೆ ನಿಮ್ಮ ಕವಿತೆಗಳ ವಸ್ತು, ವ್ಯಾಪ್ತಿ ಹೆಚ್ಚಾಗಿ ಯಾವುದು ? ಪದೇ ಪದೇ ಕಾಡುವ ವಿಷಯ ಯಾವುದು ? ಪ್ರೀತಿ ಮತ್ತು ಧರ್ಮ ಕವಿತೆಗಳಲ್ಲಿ ಬಾಲ್ಯ, ಹರೆಯ ಇಣುಕಿದೆಯೇ ? ಹಾ..ಬಾಲ್ಯಕ್ಕೆ ಅಷ್ಟು ಅವಕಾಶವಿಲ್ಲ , ಹರೆಯ ಕವಿತೆಗಳಲ್ಲಿ ಆವರಿಸಿದೆ. ಪ್ರಸ್ತುತ ರಾಜಕೀಯಸನ್ನಿವೇಶದ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು ? ತಲ್ಲಣದ ದಿನಗಳಿವು. ಕಾಯಬೇಕಾದವರೆ ಕೊಲ್ಲುವವರಾಗಿರುವ ಸನ್ನಿವೇಶ ಇದೆ. ಸಮಚಿತ್ತದಿಂದ ಇರುವುದು ಈ ಕ್ಷಣದ ಅವಶ್ಯಕತೆ. ಧರ್ಮ ,ದೇವರು ವಿಷಯದಲ್ಲಿ ನಿಮ್ಮ ನಿಲುವೇನು ? ಇವೆರಡರಲ್ಲೂ ನನಗೆ ಅಷ್ಟಾಗಿ ನಂಬಿಕೆಯಿಲ್ಲ. ಪ್ರಸ್ತುತ ಸಾಂಸ್ಕೃತಿಕ ವಾತಾವರಣದ ಬಗ್ಗೆ ನಿಮಗೆ ಏನನ್ನಿಸುತ್ತಿದೆ ? ಸಾಂಸ್ಕೃತಿಕ ವಾತಾವರಣ ಹದೆಗೆಟ್ಟಿದೆ. ಇಸಂಗಳು ಸಾಂಸ್ಕೃತಿಕ ಲೋಕವನ್ನು ಆಳುತ್ತಿವೆ. ಸಾಹಿತ್ಯ ವಲಯದ ರಾಜಕಾರಣದ ಬಗ್ಗೆ ನೀವು ಹೇಗೆ ಪ್ರತಿಕ್ರಿಯಿಸುವಿರಿ? ಇದು ಸಾಹಿತ್ಯದ ಎಲ್ಲರಿಗೂ ತಿಳಿದಿರು ವಿಷಯ. ಬಾಲ ಬಡಿಯುವವರು ಮುಂದಿದ್ದಾರೆ. ಈ ದೇಶದ ಚಲನೆಯ ಬಗ್ಗೆ ನಿಮ್ಮ ಮನಸು ಏನು ಹೇಳುತ್ತಿದೆ? ಅತೃಪ್ತಿ ಇದೆ ಅಷ್ಟೇ.. ಸಾಹಿತ್ಯದ ಬಗ್ಗೆ ನಿಮ್ಮ ಕನಸುಗಳೇನು ? ಬೇರೆ ಬೇರೆ ದೇಶದ,ಭಾಷೆಯ ಭಿನ್ನ ಸಂವೇದನೆಯ ಸಾಹಿತ್ಯಿಕ ಕೃತಿಗಳನ್ನು ಅನುವಾದಿಸುವುದು.. ಕನ್ನಡ ಹಾಗೂ ಆಂಗ್ಲ ಭಾಷೆಯ ಸಾಹಿತ್ಯದಲ್ಲಿ ನಿಮ್ಮ ಇಷ್ಟದ ಹಾಗೂ ಕಾಡಿದ ಕವಿ, ಸಾಹಿತಿ ಯಾರು ? ಕನ್ನಡದಲ್ಲಿ ಎಚ್ ಎಸ್ ಶಿವಪ್ರಕಾಶ ನನ್ನಿಷ್ಟದ ಕವಿ.ಆಂಗ್ಲಭಾಷೆಯಲ್ಲಿ ರೈನರ್ ಮಾರಿಯಾ ರಿಲ್ಕ ನನ್ನ ಪ್ರೀತಿಯ ಕವಿ . ಈಚೆಗೆ ಓದಿದ ಕೃತಿಗಳಾವವು? ಕೆಂಪು ಮುಡಿಯ ಹೆಣ್ಣು, ಪದ ಕುಸಿಯೆ ನೆಲವಿಲ್ಲ, ಬದುಕು ಮಾಯೆಯ ಆಟ, ಚಿಲಿ ಕೆ ಜಂಗಲೊಸೆ( ಹಿಂದಿ), ಖುಷಿಯೊಂಕೆ ಗುಪ್ತಚರ ( ಹಿಂದಿ), ನಿಮಗೆ ಇಷ್ಟವಾದ ಕೆಲಸ ಯಾವುದು? ಶಿಕ್ಷಕ ವೃತ್ತಿ ನಿಮಗೆ ಇಷ್ಟವಾದ ಸ್ಥಳ ಯಾವುದು ? ನಮ್ಮ ಮನೆ ಮತ್ತು ಶಾಲೆ ನಿಮ್ಮ ಪ್ರೀತಿಯ, ತುಂಬಾ ಇಷ್ಟ ಪಡುವ ಸಿನಿಮಾ ಯಾವುದು? ಮಿಲನ( ಕನ್ನಡ), ರಬ್ ನೇ ಬನಾ ದಿ ಜೋಡಿ( ಹಿಂದಿ) ನೀವು ಮರೆಯಲಾರದ ಘಟನೆ ಯಾವುದು? ಒಮ್ಮೆ ನಮ್ಮ ಮೇಲೆ ಹೆಜ್ಜೆನು ದಾಳಿ ಮಾಡಿದವು. ಇನ್ನೆನೂ ಸಾಯುತ್ತೇವೆ ಎನ್ನುವಾಗ ಭಾಷೆ,ಜಾತಿ, ಧರ್ಮಗಳನ್ನು ಮೀರಿದ ಮಾನವೀಯ ವ್ಯಕ್ತಿ ಯೊಬ್ಬ ನಮಗೆ ಸಹಾಯ ಮಾಡಿದ. ಅವತ್ತು ನನಗೆ ಪ್ರೀತಿ ಮತ್ತು ಮಾನವೀಯತೆಯ ಅವಶ್ಯಕತೆ ಎಷ್ಟಿದೆ ಎನ್ನುವ ಅರಿವು ಮೂಡಿತು. ಇದು ನನ್ನ ಜೀವನದ ಮರೆಯಲಾರದ ಘಟನೆ. ************************************************** ಹರಪನಹಳ್ಳಿ ಹುಟ್ಟೂರು. ಹರಪನಹಳ್ಳಿ ತಾಲೂಕಿನ ಮೈದೂರು-ಚಿಗಟೇರಿ ಬೆಳೆದ ಊರು. ಪಿಯು ಓದಿದ್ದು ಕೊಟ್ಟೂರಿನಲ್ಲಿ. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿ.ಎ., ಕವಿವಿಯಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ. ದಾವಣಗೆರೆ, ಸದಾಶಿವಗಡ ಮತ್ತು ಭಟ್ಕಳದಲ್ಲಿ ಕನ್ನಡ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿ, 1997 ರಿಂದ ಕಾರವಾರದಲ್ಲಿ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಜನವಾಹಿನಿ, ಜನಾಂತರಂಗ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಇವರು, ಈ ಟಿವಿ ಕನ್ನಡ ನ್ಯೂಸ್ ಚಾನೆಲ್ಲಿಗೆ ವರದಿಗಾರಿಕೆ ಬಳಿಕ ಈಗ ಉದಯವಾಣಿ , ಬೆಳಗಾವಿಯ ಲೋಕದರ್ಶನ ಪತ್ರಿಕೆಗೆ ವರದಿಗಾರರಾಗಿದ್ದಾರೆ. 2009ರಲ್ಲಿ ‘ಕಡಲದಂಡೆಗೆ ಬಂದ ಬಯಲು’ ಎಂಬ ಕಥಾ ಸಂಕಲನ, 2013ರಲ್ಲಿ ‘ಬಿಸಿಲ ಬಯಲ ಕಡಲು’ ಎಂಬ ಕವಿತಾ ಸಂಕಲನ ಪ್ರಕಟಣೆ.2019 ರಲ್ಲಿ ‘ವಿರಹಿದಂಡೆ’ ಕವಿತಾ ಸಂಕಲನ ಪ್ರಕಟಿಸಿದ್ದಾರೆ. ಕಾರವಾರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಅಂಕಣ ಬರಹ ಹೂಕೊಂಡ ಹೂಕೊಂಡತಮಿಳು ಮೂಲ : ಪೆರುಮಾಳ್ ಮುರುಗನ್ಅನುವಾದ : ನಲ್ಲತಂಬಿಪ್ರ : ಲಂಕೇಶ್ ಪ್ರಕಾಶನಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೧೨೫ಪುಟಗಳು : ೧೪೪ ಪುರುಷ ಪ್ರಧಾನ ಸಮಾಜದಲ್ಲಿ ಸ್ತಿçಯು ಶೋಷಣೆಗೊಳಗಾಗುವ ದುರಂತ ಕಥಾವಸ್ತುವನ್ನು ಹೊಂದಿದ ಕಾದಂಬರಿ ಇದು. ಜಾತಿ ಸಮಸ್ಯೆಯೂ ಇದರ ವಿನ್ಯಾಸದ ಇನ್ನೊಂದು ಮುಖ. ಅಲ್ಲದೆ ಸರಳ ಸ್ವಭಾವದ ಮಂದಿ ಎಂದು ಎಲ್ಲರೂ ಭಾವಿಸುವ ಗ್ರಾಮೀಣರಲ್ಲೂ ಎಂಥ ಕ್ರೌರ್ಯವಿರಬಹುದು ಎನ್ನುವ ಕಹಿ ಸತ್ಯವನ್ನು ಈ ಕಾದಂಬರಿ ಕಟ್ಟಿಕೊಡುತ್ತದೆ. ಮದುವೆಯಾಗಿ ಕೇವಲ ಎರಡು ವರ್ಷಗಳಲ್ಲೇ ಗಂಡನನ್ನು ಕಳೆದುಕೊಂಡ ಮಾರಾಯಿ ಕಡು ದಾರಿದ್ರö್ಯದ ಕಷ್ಟಗಳನ್ನೆದುರಿಸುತ್ತಲೇ ಮಗ ಕುಮರೇಶನನ್ನು ಬೆಳೆೆಸಿ ದೊಡ್ಡವನನ್ನಾಗಿಸುತ್ತಾಳೆ. ಉದ್ಯೋಗವನ್ನರಸಿ ಪಕ್ಕದ ತೋಲೂರಿಗೆ ಹೋಗುವ ಕುಮರೇಶ ಅಲ್ಲಿ ಸೋಡಾ ಉತ್ಪಾದನೆಯ ಕೆಲಸದಲ್ಲಿ ತೊಡಗುತ್ತಾನೆ. ಆ ಊರಿನಲ್ಲಿ ಪರಿಚಯವಾದ ಸರೋಜಳನ್ನು ಪ್ರೀತಿಸಿ ತನ್ನ ತಾಯಿಗಾಗಲಿ, ಅವಳ ಅಪ್ಪ-ಅಣ್ಣನಿಗಾಗಲಿ ತಿಳಿಸದೆ ದೇವಸ್ಥಾನದಲ್ಲಿ ಸರಳ ವಿವಾಹವಾಗಿ ಅವಳನ್ನು ಊರಿಗೆ ಕರೆತರುತ್ತಾನೆ. ಆದರೆ ಅಲ್ಲಿ ಕುಮರೇಶನ ತಾಯಿ ಸೊಸೆಯನ್ನು ಸ್ವೀಕರಿಸಲು ಸುತರಾಂ ಒಪ್ಪುವುದಿಲ್ಲ. ಹುಡುಗಿ ಸುಂದರಿಯಾದರೂ ಯಾವ ಜಾತಿಯವಳೋ ಎಂಬುದು ಅವಳ ಆತಂಕ. ಆದ್ದರಿಂದ ದಿನವಿಡೀ ಸೊಸೆಯನ್ನು ಬಾಯಿಗೆ ಬಂದAತೆ ಬೈಯುತ್ತ ಮನ ನೋಯಿಸುತ್ತ ಇರುತ್ತಾಳೆ. ಸರೋಜಳಿಗೆ ಹೊಸ ವಾತಾವರಣ ಭಯಾನಕವೆನ್ನಿಸುತ್ತದೆ. ಊರಿನ ಹೆಂಗಸರೆಲ್ಲರೂ ಆಗಾಗ ಬಂದು ಅವಳ ಕುಲ-ಗೋತ್ರಗಳನ್ನು ವಿಚಾರಿಸುತ್ತ, ಕೆಲವೊಮ್ಮೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತ ಇರುತ್ತಾರೆ. ತೋಲೂರಿನ ಪಟ್ಟಣದ ಜೀವನಕ್ಕೆ ಒಗ್ಗಿಕೊಂಡಿದ್ದ ಸರೋಜಳಿಗೆ ಹಳ್ಳಿಯ ಬಡ ಮನೆಯ ಸರಳ ಜೀವನಕ್ಕೆ ಹೊಂದಿಕೊಳ್ಳುವುದು ಮತ್ತು ಅವರೆಲ್ಲರ ನಿಂದನೆಗಳನ್ನು ಸಹಿಸಿಕೊಳ್ಳುವ ನರಕ ಯಾತ£ಗಳುÉ ಅಸಹನೀಯವೆನ್ನಿಸುತ್ತದೆ. ಅವಳು ಕುಮರೇಶನನ್ನು ವಶೀಕರಿಸಿಕೊಂಡ ಮಾಟಗಾತಿಯೆಂದು ಎಲ್ಲರೂ ವ್ಯಂಗ್ಯ ಮಾತನಾಡಿದಾಗ ಅಲ್ಲಿಂದ ಎಲ್ಲಾದರೂ ಓಡಿ ಹೋಗಬೇಕು ಅನ್ನಿಸುತ್ತದೆ. ಒಮ್ಮೆ ಕುಮರೇಶ್ ಹೊಸದಾಗಿ ಸೋಡಾ ಫ್ಯಾಕ್ಟರಿ ಆರಂಭಿಸುವ ಬಗ್ಗೆ ಮಾತನಾಡಲು ಪಕ್ಕದ ಊರಿಗೆ ಹೋಗಿರುತ್ತಾನೆ. ಅವನು ಆ ರಾತ್ರಿ ಮನೆಗೆ ಬರುವುದಿಲ್ಲವೆಂದು ತಿಳಿದ ಅವನ ತಾಯಿ ಮಾರಾಯಿ ಊರಿನ ಕೆಲವು ಮಂದಿಯನ್ನು ಕೂಡಿಕೊಂಡು ಸರೋಜಳನ್ನು ಕೊಲ್ಲುವ ಯೋಜನೆ ಹಾಕುತ್ತಾಳೆ. ಆದರೆ ಆ ಸಂಚನ್ನು ಅಡಗಿ ಕೇಳಿದ ಸರೋಜ ಅಲ್ಲಿಂದೆದ್ದು ಮುಳ್ಳು ಪೊದೆಗಳ ಹಿಂದೆ ಅಡಗಲು ಹೋಗುತ್ತಾಳೆ. ಅಪಾಯಕಾರಿಯೂ ಭಯಾನಕವೂ ಆದ ಆ ಜಾಗದಲ್ಲಿ ಒಳಗೊಳಗೆ ಜಾರುವ ಸರೋಜಾಳ ಮೈಕೈಗಳಿಗೆ ಗಂಭೀರ ಗಾಯಗಳಾಗುತ್ತವೆ. ಕೊಲೆ ಪಾತಕಿಗಳು ಅವಳನ್ನು ಹೇಗಾದರೂ ಮಾಡಿ ಅಲ್ಲಿಂದ ಹೊರಗೆಳೆದು ಕೊಲ್ಲಲು ಪ್ರಯತ್ನಿಸುತ್ತಾರೆ. ಆದರೆ ಅವರ ಪ್ರಯತ್ನ ಫಲಕಾರಿಯಾಗುವುದಿಲ್ಲ. ಸರೋಜಾ ಭಯದಿಂದ ತತ್ತರಿಸುತ್ತಿದ್ದಂತೆ ಕಿವಿಯ ಮೇಲೆ ಬಿದ್ದ ಕುಮರೇಶನ ಸೈಕಲ್ ಬೆಲ್ಲಿನ ಶಬ್ದ ಅವಳಿಗೆ ಮರುಜೀವ ಕೊಡುತ್ತದೆ. ಹೆಣ್ಣನ್ನು ವಿನಾಕಾರಣ ಪೀಡಿಸುವ ನಮ್ಮ ಸಮಾಜ ಎಂದು ಬದಲಾಗುತ್ತದೋ ಎಂಬ ಆತಂಕವನ್ನು ಈ ಕಾದಂಬರಿ ನಮ್ಮಲ್ಲಿ ಹುಟ್ಟಿಸುತ್ತದೆ. ನಲ್ಲತಂಬಿಯವರ ಅನುವಾದ ಆಡುಭಾಷೆಯ ಬಳಕೆಯಿಂದ ಆಪ್ತವಾಗುತ್ತದೆ. ************************************* ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

ಇತರೆ, ಪ್ರವಾಸ ಕಥನ

ಸಿದ್ಧಿಸಿತೆನಗೆ ” ಸಿದ್ಧರ ಬೆಟ್ಟ “ಯಾನ

ಪ್ರವಾಸ ಕಥನ ಸಿದ್ಧಿಸಿತೆನಗೆ  -ಸಿದ್ಧರ ಬೆಟ್ಟ ಯಾನ ಚಂದ್ರಮತಿ ಪುರುಷೋತ್ತಮ್ ಭಟ್     ಬಹುದಿನದ ಬಯಕೆ, ನೋಡಲೇ ಬೇಕೆಂಬ ತುಡಿತದ ಜೊತೆಗೆ ನಲವತ್ತರ ಹರೆಯ ದಾಟಾಯ್ತು ಈಗಲೂ ನೋಡದಿದ್ದರೆ ಇನ್ನು ಯಾವಾಗ ನೋಡೋದು ಅನ್ನೋ ಅನಿಸಿಕೆ. ನನ್ನ ಮಗಳು ಹಾಗೂ ಅವಳ ಗೆಳೆಯರು ಬರ್ತೀರ ಆಂಟಿ ಸಿದ್ಧರ ಬೆಟ್ಟಕ್ಕೆ ಅಂದಾಕ್ಷಣ ವೈ ನಾಟ್ ! ಎಂದು ‘ ರೋಗಿ ಬಯಸಿದ್ದು ಹಾಲು ಅನ್ನ ವೈದ್ಯ ಹೇಳಿದ್ದು ಹಾಲು ಅನ್ನ ‘ ಅಂತ ಹುಂ ಎಂದು ಹೊರಟೇ ಬಿಟ್ಟೆ. ತುಂಬಾ ದಿನದಿಂದ ಅಂದು ಕೊಂಡ ಈ ಬೆಟ್ಟ ನೋಡುವ ಭಾಗ್ಯಬಂದೊದಗಿಯೇ ಬಿಟ್ಟಿತು. ಸೂರ್ಯೋದಯಕ್ಕೂ ಮುಂಚೆ ಸುಮಾರು 4.45 ರ ಸಮಯಕ್ಕೆ ಶುರುವಾಯ್ತು ನಮ್ಮ ಪಯಣ. ಜನಸಂದಣಿ ಇರದ ಈ ಸಮಯದಲ್ಲಿ ನಮ್ಮ ಬೆಂದಕಾಳೂ ಕೂಡ ಸುಂದರ ಹಾಗೂ ಸುಖಕರವೆನಿಸುವುದು. ಬೆಂಗಳೂರಿನಿಂದ 100 ಕಿ.ಮೀ ದೂರದಲ್ಲಿರುವ ಸಿದ್ದರ ಬೆಟ್ಟಕ್ಕೆ ಐದು ಮಂದಿಯನ್ನು ಹೊತ್ತು ಡಸ್ಟರ್ ಶರವೇಗದಲ್ಲಿ ನಗರವನ್ನು ದಾಟಿ ಇನ್ನೇನು ಸಿದ್ಧರ ಬೆಟ್ಟದ ದಾರಿ ತಲುಪಿದ್ದಂತೆಯೆ ನಮ್ಮನ್ನು ಸೆಳೆದದ್ದು ಆ ಊರಿನ ರುಚಿಕರವಾದ ತಟ್ಟೆ ಇಡ್ಲಿ .  ಅಲ್ಲಿಂದ 8 ರಿಂದ 10 ಕಿ.ಮೀ ದೂರದಲ್ಲಿ ಈ ಬೆಟ್ಟ . ತಲುಪಿದಾಗ ಸುಮಾರು ಮುಂಜಾನೆ 6.30 ಸಮಯ. ಸದ್ದು ಗದ್ದಲ ಇಲ್ಲದ ನಿರ್ಜನ ಪ್ರಶಾಂತ ತಾಣ. ಸಿಲಿಕಾನ್ ಸಿಟಿಯಿಂದ ಬರುವ ಯಾತ್ರಿಕರಿಗೆ ಒಮ್ಮೆ ಯಾದರೂ ಹಾಯ್ ಎನಿಸದೇ ಇರದು.ಈ ಬೆಟ್ಟವು ಸುಮಾರು 6 ಕಿಲೋಮೀಟರ್ ಚಾರಣ. 1700ಅಡಿ ಎತ್ತರದಲ್ಲಿರುವ ಈ ಬೆಟ್ಟವು ಔಷಧೀಯ ಸಸ್ಯಗಳ ಬೀಡು. ೨೦೦೦ ಕ್ಕೂ ಹೆಚ್ಚು ಸಸ್ಯಗಳಿರುವುದು ಶ್ಲಾಘನೀಯ. ಈ ನಿಟ್ಟಿನಲ್ಲಿ ಕೆ.ಫ್.ಡಿ ಗೆ ಧನ್ಯವಾದ ಹೇಳಲೇ ಬೇಕು   ಶುರುವಾಯ್ತು ಸೆಲ್ಫಿಯಿಂದಲೇ ನಮ್ಮ ಉತ್ಸಾಹದ ಆರೋಹಣ ಚಾರಣ. ಹಸಿರಿನ ಔಷಧೀಯ ಮರಗಿಡಗಳ ನಡುವೆ ಹಕ್ಕಿಗಳ ಕಲರವ ಹಾಗೂ ತುಂತುರು ಮಳೆಯಲ್ಲಿ ಹತ್ತಿದ ಕ್ಷಣ ಅದ್ಬುತ ! ನೂರಾರು ಮೆಟ್ಟಿಲುಗಳ ನಂತರ ಕಡಿದಾದ ಬೆಟ್ಟದಲ್ಲಿ ಮುಂದಕ್ಕೆ ಹತ್ತಲು ಗಟ್ಟಿ ಕಲ್ಲುಗಳೇ ನಮಗೆ ಆಸರೆಯಾದವು. ಅಂತು ಇಂತೂ ಅಸಾಧ್ಯ ಎನಿಸಿದರೂ ಅಲ್ಲಲ್ಲಿ ತಂಗುದಾಣ ನಮ್ಮನ್ನು ಪ್ರೋತ್ಸಾಹಿಸಿತು. ಕ್ಷಣಕಾಲ ನಿಬ್ಬೆರಗಾದೆವು ! ನೋಡಿದರೆ ದೊಡ್ಡ ಕಲ್ಲು ಬಂಡೆಯನ್ನೇ ಕೊರೆದು ಮಾಡಿದ ಕಿರಿದಾದ ಮೆಟ್ಟಿಲುಗಳು. ಜಿನುಜಿನುಗುವ ಮಳೆಯಲ್ಲಿ ಹತ್ತುತ್ತಾ ಕಾಲು ಜಾರಿದರೆ ಎನ್ನುವ ಆತಂಕದಲ್ಲಿ ಮುಂದೆ ಮುಂದೆ ಹೆಜ್ಜೆ ಇಟ್ಟೆವು. ಹತ್ತಿದಾಕ್ಷಣ ಜಯಶಾಲಿಯದೆವಾ ? ಅನ್ನೋ ಅನಿಸಿಕೆಯ ಜೊತೆ ಜೊತೆಗೆಮಂಜು ಮುಸುಕಿದ ತುದಿಬೆಟ್ಟವು ‘  ಮಾನವ ನೀನೆಷ್ಟು ಅಲ್ಪ ! ಎಂದು ನಗುವುದೇನೋ ಎನ್ನಿಸಿತು.  ಸೌಂದರ್ಯ , ಪ್ರಶಾಂತತೆ  ನಮ್ಮನ್ನು ಮೂಖವಿಸ್ಮಿತಗೊಳಿಸಿತು. ಅಚ್ಚರಿ ! ಆ ತುತ್ತತುದಿಯಲ್ಲಿ ಕಲ್ಲು ಬಂಡೆಯಲ್ಲೂ ಸದಾಕಾಲ ಎಳಿನೀರಿನಂತಹ ತಣ್ಣೀರು ಕಾಣಸಿಗುವುದು.  ಸಿದ್ಧರು ಸಿದ್ಧಿ ಫಡೆದಂತಹ ಸ್ಥಳ ಆಗಿರೋದರಿಂದ ಆಸ್ತಿಕರಿಗೆ ಹೇಳಿಸಿದ ಸ್ಥಳ ಕೂಡ . ಅಲ್ಲಿ ಈಗಲೂ ಬಂದವರೆಲ್ಲರಿಗೂ ಆಶೀರ್ವದಿಸಲು ಒಬ್ಬರು ಸಿದ್ಧರು ದೊಡ್ಡ ಕಲ್ಲು ಬಂಡೆಯ ಒಳಗಡೆ ತಪಸ್ಸು ಮಾಡುತ್ತಾ ಕುಳಿತಿರುತ್ತಾರೆ. ಆಶೀರ್ವಾದ ಪಡೆದ ನಾವು ಕೊಂಚ ಹೊತ್ತು ಅಲ್ಲೇ ಧ್ಯಾನ ಮಗ್ನರಾದೆವು. ಇನ್ನೂ ಬೆಟ್ಟದ ತುದಿ ನೋಡುವ ಬಯಕೆ ಹೊತ್ತು ಬಂದ ನಾವು ತುಸು ವಿಶ್ರಮಿಸಿ ಮುಂದಿನ ಹೆಜ್ಜೆ ಬೆಳೆಸಿದೆವು. ಅಲ್ಲಿಂದ ಮುಂದೆ ದೊಡ್ಡ ಬಂಡೆಯೊಳಗಿಂದ ಹತ್ತುತ್ತಾ ಹತ್ತುತ್ತಾ ಹೊರಬಂದು ನೋಡಿದರೆ ಅಲ್ಲಿರುವ  ಮನಮೋಹಕ ಪ್ರಕೃತಿಯ ವೈಚಿತ್ರ್ಯ ! ಮಂಜಿನ ಸಹಿತ ಬೀಸುತ್ತಿರುವ ಶೀತಗಾಳಿಯು ಹಾಗೂ ಮುಂಜಾನೆಯ ಹೊಂಗಿರಣದಿಂದ ಫಳ ಫಳಿಸುತ್ತಿರುವ  ಆ ಬೆಟ್ಟವು ನಮ್ಮನ್ನು ಬೇರೆ ಲೋಕಕ್ಕೆ ಕರೆದೊಯ್ದು ಬಿಟ್ಟಿತು. ಹನ್ನೆರೆಡು ಗಂಟೆಯವರೆಗೂ ಹಿಮಾವೃತ ಬೆಟ್ಟವನ್ನು ನೋಡಿದನುಭವ ಅವರ್ಣನೀಯ ! ನಮ್ಮ ಕರ್ನಾಟಕ ಆಹಾ ಎಷ್ಟು ಅದ್ಭುತ ! ಎಂದೆನಿಸಿತು. ವಾರೆ ವಾವ್ ! ಈ ಸಿದ್ಧರ ಬೆಟ್ಟ ನೋಡುವಾವಕಾಶ ಎಲ್ಲರಿಗೂ ಸಿದ್ಧಿಸಲಿ ಸಿದ್ಧರ ಆಶೀರ್ವಾದ ಪಡೆಯಲಿ . ಎನ್ನುತ್ತಾಮತ್ತೊಂದಿಷ್ಟು ಸೆಲ್ಫಿ ಒಂದಿಷ್ಟು ಮಸ್ತಿ ಮಾಡುತ್ತಾ ಬೆಟ್ಟದಿಂದ ನಿಧಾನವಾಗಿ ಅವರೋಹಣ ಮಾಡಿದೆವು. ಏರಿಳಿತಗಳ ರೋಚಕ ಅನುಭವವನ್ನು ಮೆಲುಕು ಹಾಕುತ್ತಾ ನಗರಿಗೆ  ಹಿಂತಿರುಗಿ ಪ್ರಯಾಣ ಬೆಳೆಸಿದೆವು. ——— ಮಾರ್ಗ :ಬೆಂಗಳೂರು – ತುಮಕೂರು -ತೋವಿನಕೆರೆ – ತುಂಬಾಡಿ – ಸಿದ್ಧರಬೆಟ್ಟಸರಿಯಾದ ಸಮಯ : ಜೂನ್-ಜುಲೈ-ಆಗಸ್ಟ್ಚಾರಣದ ಸಮಯ : ಒಂದು ಗಂಟೆಸಾಧ್ಯ : ಚಾರಣಾಸಕ್ತರು ಹಾಗೂ ಪ್ರಕೃತಿ ಪ್ರಿಯರಿಗೆ ಮಾತ್ರ ನಿಷೇಧ : ಪ್ಲಾಸ್ಟಿಕ್ಸಲಹೆ : ಒಂಟಿ  ಪಯಣ ಬೇಡ. ಗುಂಪಿನ ಜೊತೆ ಯೋಗ್ಯ          “ಪ್ರಕೃತಿಯನ್ನು ಉಳಿಸಿ ಪ್ರೀತಿಸಿ ಆದರಿಸಿ ಆನಂದಿಸಿ “ *********************************

ಸಿದ್ಧಿಸಿತೆನಗೆ ” ಸಿದ್ಧರ ಬೆಟ್ಟ “ಯಾನ Read Post »

ಕಾವ್ಯಯಾನ

ಹಾಯ್ಕುಗಳು

ಹಾಯ್ಕುಗಳು ಭಾರತಿ ರವೀಂದ್ರ 1) ವಾತ್ಸಲ್ಯ ತಾಯಿ ಸೆರಗುಅಂಬರವು ನಾಚಿತುವಾತ್ಸಲ್ಯ ಸಿರಿ. 2) ವಿಸ್ಮಿತ ಸುಖ ಕನಸು :ಕಂದಮ್ಮನ ಮೊಗದಿ :ದೇವ ವಿಸ್ಮಿತ. 3) ಚೆಲವು ಇಳೆ ಚೆಲವು :ಹಸಿರಿನ ಸಿರಿಯು,ನೆಮ್ಮದಿ ಬಿಡು. 4) ಮಧು ಮುತ್ತಿನ ಮಧು :ಮತ್ತೇರಿತು ದುಂಬಿಗೆ,ಶೃಂಗಾರ ಮಾಸ 5) ಹೃದಯ ಖಾಲಿ ಆಗಿತ್ತು :ಕನಸಿಲ್ಲದ ಮನ,ಬೆಂದ ಹೃದಯ. 6) ಸೀಮಂತ ಧರೆ ಸೀಮಂತ :ಹಕ್ಕಿಯ ಗಾನ ಸಭೆ,ನಾಚಿದ ಪ್ರಭೆ. 7) ಹೊಂಬಿಸಿಲು ಕಿರುನಗೆಯು :ಹೊಂಬಿಸಿಲು ಬಾಳಿಗೆ,ಸ್ವರ್ಗವು ಇಲ್ಲೇ. 8) ಹೂ ಬನ ಕಾವ್ಯದ ಬೀಜ :ಕವಿ ಬಿತ್ತಿ ಮನದಿ,ಹೂ ಬನ ಹಾಗೆ. 9) ಪ್ರೇಮದ ರಾಗ ಒಲವ ರಂಗು :ಮೊಗ್ಗೊಂದು ಅರಳಿತುಪ್ರೇಮದ ರಾಗ. 10) ಬಂಗಾರ ಜೀವನ ಪಾಠ :ಅರಿತು ನಡೆದಲ್ಲಿಬಾಳು ಬಂಗಾರ. *********************************

ಹಾಯ್ಕುಗಳು Read Post »

ಪುಸ್ತಕ ಸಂಗಾತಿ

ಡಾ.ಅಂಬೇಡ್ಕರ್ ವಾದದ ಆಚರಣೆ

ಪುಸ್ತಕ ಸಂಗಾತಿ ಡಾ.ಅಂಬೇಡ್ಕರ್ ವಾದದ ಆಚರಣೆ ಡಾ.ಅಂಬೇಡ್ಕರ್ ವಾದದ ಆಚರಣೆಲೇಖಕರು– ಡಾ.ಸಿ.ಜಿ.ಲಕ್ಷ್ಮೀಪತಿಪುಟಗಳು– 104ಪುಸ್ತಕದ ಬೆಲೆ– 68 ರೂಪಾಯಿಗಳುಪ್ರಕಾಶನ– ಚಾರು ಪ್ರಕಾಶನಅಡ್ರೆಸ್– # 83, ಪ್ರೈಡ್ ಪ್ಲಾಜಾ ಕಾಂಪ್ಲೆಕ್ಸ್, ಆದರ್ಶ ಕಾಲೇಜ್ ಹತ್ತಿರ, 5 ನೇ ಮುಖ್ಯ ರಸ್ತೆ. ಬೆಂಗಳೂರು. ‘ಡಾ.ಅಂಬೇಡ್ಕರ್ ವಾದದ ಆಚರಣೆ’ ಎಂಬ ಪುಸ್ತಕವು,  ಮತ್ತು ಆ ಪುಸ್ತಕ ಬರೆದ ಡಾ.ಸಿ.ಜಿ.ಲಕ್ಷೀಪತಿ ಅವರ ಬಗೆಗೆ ಒಂದಿಷ್ಟು..! ಸಿ.ಜಿ. ಲಕ್ಷ್ಮೀಪತಿ ಅವರು ಸದ್ಯ ಬೆಂಗಳೂರಿನ ವಿ.ಎಚ್.ಸಿ ಸೆಂಟ್ರಲ್ ಇನ್ ಸ್ಟಿಟ್ಯೂಟ್ ಆಫ್ ಹೋಮ್ ಸೈನ್ಸ್ ನಲ್ಲಿಸಮಾಜಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರು. ಕನಕಪುರದ ರೂರಲ್ ಕಾಲೇಜು, ಕನ್ನಡ ವಿಶ್ವವಿದ್ಯಾಲಯ ಹಾಗೂ ವಿವಿಧ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬೋಧನಾನುಭವವಿದೆ. ತುಮಕೂರು ಜಿಲ್ಲೆಯ ಮಧುಗಿರಿಯ ಟಿ.ವಿ.ವಿ. ಕಾಲೇಜಿನಲ್ಲಿ ಪದವಿ ಮುಗಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅಂತರ್ ಶಿಸ್ತೀಯ ಅಧ್ಯಯನಕ್ಕಾಗಿ ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್ ಡಿ ಮುಗಿಸಿದರು. ಮೈಸೂರು ಮುಕ್ತ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪದವಿ‌ ಪಡೆದರು. ಅವರ ಕೃತಿಗಳೆಂದರೆ ಕ್ಯಾಸ್ಟ್ ಕೆಮಿಸ್ಟ್ರಿ, ಚಿತ್ರಲೆ ವೃಕ್ಷ (ಭಾರತದ ಲೈಂಗಿಕತೆಯ ಸಾಂಸ್ಕೃತಿಕ ಕಥನ), ಥಾಯ್  ಲ್ಯಾಂಡ್ ಎಂಬ ಮುಗುಳ್ನಗೆ (ಪ್ರವಾಸ ಕಥನ), ನಿಜ ಭ್ರಮೆಗಳ ರೂಪಕ (ಲೇಖನಗಳ ಸಂಗ್ರಹ), ಮತಾಂತರ ಸತ್ಯಾನ್ವೇಷಣೆ  (ಸಂಪಾದನೆ), ಕರ್ನಾಟಕದ ಸಮಾಜಶಾಸ್ತ್ರ (ಪಿಎಚ್ ಡಿ ಮಹಾಪ್ರಬಂಧದ ಪುಸ್ತಕ ರೂಪ), ಅಂಬೇಡ್ಕರ್ ವಾದದ ಆಚರಣೆ, ಆಧುನಿಕೋತ್ತರ ಮತ್ತು ಮಾರ್ಕ್ಸ್ ವಾದೋತ್ತರ. ಹೀಗೆಯೇ ಡಾ.ಸಿ.ಜಿ.ಲಕ್ಷ್ಮೀಪತಿ ಅವರ ಸಾಹಿತ್ಯದ ಕೆಲಸದ ಜೊತೆಗೇಗೆನೇ ಜೀವನ ಹೋರಾಟ ಸಾಗಿದೆ..! # ಈಗ ಡಾ.ಸಿ.ಜಿ.ಲಕ್ಷ್ಮೀಪತಿ ಅವರ ‘ಅಂಬೇಡ್ಕರ್ ವಾದದ ಆಚರಣೆ’ ಕುರಿತು ಚರ್ಚಿಸೋಣ…– ದಮನಿತರ ಬಿಡುಗಡೆ ಮಾರ್ಗ ಈ ಡಾ.ಸಿ.ಜಿ.ಲಕ್ಷ್ಮೀಪತಿ ಅವರ ‘ಅಂಬೇಡ್ಕರ್ ವಾದದ ಆಚರಣೆ’..! ಪಾರಂಪರಿಕ ಸಮಾಜಶಾಸ್ತ್ರಜ್ಞರಿಗಿಂತ ವಿಭಿನ್ನವಾದ ಲೋಕದೃಷ್ಟಿಯಲ್ಲಿ ಆಲೋಚಿಸುವ ಚಿಂತಕರಲ್ಲಿ ಒಬ್ಬರಾದ ಡಾ.ಸಿ.ಜಿ.ಲಕ್ಷ್ಮೀಪತಿ ಅವರ ‘ಅಂಬೇಡ್ಕರ್ ವಾದದ ಆಚರಣೆ’ ಎಂಬ ಪುಸ್ತಕ. ಮೊದಲಿಗೇ ವಿಶಿಷ್ಟವಾದ ಕೃತಿ ನೀಡುತ್ತಿರುವ ಡಾ.ಸಿ.ಜಿ.ಲಕ್ಷ್ಮೀಪತಿಯವರು ಮೊದಲಿಗೆ ಪ್ರಸಂಸಾರ್ಹರು. ಚರಿತ್ರೆಯುದ್ದಕ್ಕೂ ಮತ್ತು ಪ್ರಸ್ತುತ ಸಂದರ್ಭದಲ್ಲೂ ಶೋಷಕರ ಕಬಂಧ ಬಾಹುವಿನಲ್ಲಿ ಸಿಲುಕಿ ನಲಗುತ್ತಿರುವ ದಲಿತರು ಒಂದು ಕಡೆ. ಇನ್ನೊಂದು ಕಡೆ ಹಿಂದುಳಿದ ವರ್ಗದವರು. ಅಲ್ಲದೇ ಮಹಿಳೆಯರು, ದಮನಿತರನ್ನು ಬಿಡುಗಡೆಗೊಳಿಸಲು ಇರುವ ಏಕೈಕ ಮಾರ್ಗ ‘ಅಂಬೇಡ್ಕರ್ ವಾದದ ಕ್ರಿಯಾಚರಣೆ’ಯಾಗಿದೆ. ************************************** ಆದರೆ ಅಂಬೇಡ್ಕರ್ ವಾದದ ಆಚರಣೆಯನ್ನು ಜನರು ತಮ್ಮ ದಿನನಿತ್ಯದ ಜೀವನದಲ್ಲಿ ಹೇಗೆ ಅನುಸರಿಸಬೇಕು ಎನ್ನುವುದಕ್ಕೆ ವಾರ್ಗಸೂಚಿಯಾಗಿಯೂ ಆಗಿದೆ ಈ ಪುಸ್ತಕ. ಅಂಬೇಡ್ಕರ್ ವಾದವು ತಾಂತ್ರಿಕವಾಗಿ ಪಠಣದ ಆಚರಣೆ ಮಾತ್ರವಾಗದೇ ಶೋಷಕರ ಅಂದರೆ ಬ್ರಾಮಣ್ಯ ಪ್ರಜ್ಞೆಯ ವಿರುದ್ಧ ಸತತವಾಗಿ ಸೆಣಸಾಡುವ ಮೂಲಕ ದಮನಿತರ ಪರವಾದ ಆಶಯಗಳನ್ನು ಈಡೇರಿಸುವಲ್ಲಿ ಮತ್ತು ಶೋಷಣೆಯಿಂದ ಬಿಡುಗಡೆಗೊಳಿಸುವಲ್ಲಿ ಅಂಬೇಡ್ಕರ್ ವಾದದ ತಿಳಿವು ಈ ಪುಸ್ತಕದಲಿದೆ ಅದರ ತಿಳುವು. ಅರವು ಮತ್ತು ಕ್ರಿಯಾಶೀಲತೆ ಎಷ್ಟು ಮುಖ್ಯ ಎನ್ನುವುದನ್ನು ವಿವರಿಸುವ ಪ್ರಣಾಳಿಕೆಯಂತಿದೆ ಈ ಅಂಬೇಡ್ಕರ್ ವಾದದ ಪುಸ್ತಕವು. ಕಿರಿದರಲ್ಲಿ ಹಿರಿದನ್ನು ಹೇಳುವ ಈ ಹೊತ್ತಿಗೆಯನ್ನು ಪ್ರತಿಯೊಬ್ಬರೂ ಓದಲೇಬೇಕಾದ ಮಹತ್ವದ ಸಂಗತಿಗಳನ್ನು ಒಳಗೊಂಡಿದೆ ಈ ಪುಸ್ತಕ. ಮನುವಾದ ಸಂಸ್ಕೃತಿಯ ಪ್ರಣೀತ ಬ್ರಾಹ್ಮಣ್ಯಶಾಹಿಯ ಆಕ್ರಮಣಕಾರಿತನವನ್ನು ಹಿಮ್ಮೆಟ್ಟಿಸುವ, ಅದರಿಂದ ಬಿಡುಗಡೆಗೊಳ್ಳುವ ಹಿನ್ನೆಲೆಯಲ್ಲಿ ಅಂಬೇಡ್ಕರ್ ವಾದ ಒಂದು ಅಸ್ತ್ರವಾಗಬಲ್ಲದು ಎನ್ನುವುದು ಇಲ್ಲಿನ ಬರಹಗಳೆಲ್ಲವೂ ವಿವರಿಸುತ್ತವೆ. ಅಷ್ಟೇ ಅಲ್ಲದೇ ಡಾ.ಸಿ.ಜಿ.ಲಕ್ಷ್ಮೀಪತಿಯವರು ‘ಅಂಬೇಡ್ಕರ್ ವಾದದ ಆಚರಣೆ’ಯು ಮಾರ್ಷಲ್ ಆರ್ಟ್ಸ್ ಇದ್ದಹಾಗೆ. ಎದುರಾಳಿಯನ್ನು ಮಣಿಸುವಾಗ ಒಂದೇ ಒಂದು ತಂತ್ರ ಬಳಸುದಿಲ್ಲ ಅಂಬೇಡ್ಕರ್ ವಾದವು ಎಂದು ವಿವರಿಸುತ್ತಾರೆ ಡಾ.ಸಿ.ಜಿ.ಲಕ್ಷ್ಮೀಪತಿ ಅವರು. ಮೂರು ಭಾಗಗಳಲ್ಲಿ ಹರಡಿಕೊಂಡಿರುವ ಈ ಕೃತಿಯ ಮೂದಲ ಭಾಗದಲ್ಲಿ ಅಂಬೇಡ್ಕರ್ ವಾದದ ವಿವರಣೆ. ಸೈದ್ಧಾಂತಿಕತೆಯನ್ನು ವಿವರಿಸಿದರೆ ಎರಡನೇ ಭಾಗದಲ್ಲಿ ಹೆಸರಾಂತ ಚಿಂತಕರಾದ ಪಾರ್ವತೀಶ್ ಬಿಳಿದಾಳೆ ಅವರ ಹಿನ್ನುಡಿ ಇದೆ. ಸುದೀರ್ಘವಾದ ಹಿನ್ನುಡಿಯು ಡಾ.ಸಿ.ಜಿ.ಲಕ್ಷ್ಮೀಪತಿ ಅವರ ಈ ಬರಹದ ಆಳ-ಅಗಲ ಮತ್ತು ವೈಶಿಷ್ಟ್ಯವನ್ನು ಬಹಳ ಗಂಭೀರವಾಗಿ ಬರೆದ ಭಾಷ್ಯವಾಗಿದೆ. ಮತ್ತೂ ಡಾ.ಸಿ.ಜಿ.ಲಕ್ಷ್ಮೀಪತಿ ಅವರ ಆಲೋಚನೆಯ ಮುಂದುವರಿಕೆಯೂ ಆಗಿದೆ. ಹಾಗಾಗಿ ಕೃತಿಯನ್ನು ಪ್ರತಿಯೊಬ್ಬರೂ, ಅದರಲ್ಲೂ ಯುವಜನತೆ ಓದಲೇಬೇಕಾದ ಕೃತಿಯಾಗಿದೆ. ಮೂರನೇ ಭಾಗದಲ್ಲಿ ಜಾಗತಿಕ ಮಟ್ಟದಲ್ಲಿ ಆಕಾಶದೆತ್ತರಕ್ಕೆ ಬೆಳೆದ, ಆಲದ ಮರದಂತೆ ಆವರಿಸಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಭವ, ಅಧ್ಯಯನದ ಅಘಾದತೆ, ಗಂಭೀರತೆ, ವಿಸ್ತಾರ, ಓದಿನ ವ್ಯಾಪಕತೆಯ ಹರವು ಎಂಥದ್ದು ಎನ್ನುವುದನ್ನು ತಿಳಿಯಪಡಿಸುವ ಹಿನ್ನೆಲೆಯಲ್ಲಿ ಅಂಬೇಡ್ಕರ್ ಅವರು ತಮ್ಮ ಬರಹದಲ್ಲಿ ದಾಖಲಿಸಿದ ಉಲ್ಲೇಖಗಳ ಮಾಹಿತಿಯನ್ನು ನೀಡಿರುವುದು ಅವರ ಘನತೆಯನ್ನೂ ಮತ್ತಷ್ಟೂ ಹೆಚ್ಚಿಸುತ್ತದೆ..! ಎಲ್ಲರೂ ಕೊಂಡು ಓದಿ ಕ್ರಿಯಾಶೀಲ ಆಚರಣೆಗೆ ಕಿಂಚಿತ್ತಾದರೂ ತೊಡಗಿಸಿಕೊಂಡರೆ ಆ ಮೂಲಕ ಮೂಲಕ ಅಂಬೇಡ್ಕರ್ ಅವರ ತಿಳಿವಿಗೂ, ಕೃತಿಕಾರರ ಡಾ.ಸಿ.ಜಿ.ಲಕ್ಷ್ಮೀಪತಿ ಅವರ ಬರಹಕ್ಕೂ ಗೌರವ ತಂದಂತಾಗುತ್ತದೆ ಅಂತ ಹೇಳುತ್ತಾ ಈ ವಿಮರ್ಶಾ ಬರಹ ಮುಗಿಸುತ್ತೇನೆ… ****************************** ಕೆ.ಶಿವು.ಲಕ್ಕಣ್ಣವರ

ಡಾ.ಅಂಬೇಡ್ಕರ್ ವಾದದ ಆಚರಣೆ Read Post »

ಕಾವ್ಯಯಾನ

ಕಾಡುವ ಹಕ್ಕಿ.

ಕಾಡುವ ಹಕ್ಕಿ ಅಬ್ಳಿ,ಹೆಗಡೆ ಹಾಡು ಹಕ್ಕಿಯೊಂದು  ನಿತ್ಯಕಾಡುತಿದೆ  ‘ಹಾಡು ನೀನು’ಎಂದು.          ಗಂಟಲೊಣಗಿದರೆ         ಕಂಠನುಲಿಯದದು         ಹಾಡಲೇಗೆ ಇಂದು..?    ಮರ್ಮವರಿಯದೆ   ಧರ್ಮ,ಕರ್ಮಗಳ   ನಡುವೆ ಬಂಧಿ ನಾನು.          ಹಾರಲಾಗದಿದೆ         ಭಾರ ರೆಕ್ಕೆಯಿದೆ         ಹೊರಗೆ ಬಂದರೂನು.    ನೋವು,ಹಿಂಸೆಗಳು   ಸುತ್ತ ಕುಣಿಯುತಿವೆ   ಕೊಳ್ಳಿ ದೆವ್ವದಂತೆ.           ಹಸಿರು ಪ್ರಕ್ರತಿಯಾ          ತಂಪು,ಸೊಂಪುಗಳು          ಒಡಲ ಬೆಂಕಿಯಂತೆ.    ಹರಿವನದಿಯಂತೆ   ಬದುಕು ಸರಿಯುತಿದೆ   ಸೆಳವು ಈಜಲಾರೆ.            ಖುಷಿಯ ಬಾನಿನಲಿ           ಹಾಡಿ,ತೇಲುವದು           ಎಂತೋ…?ಹೇಳಲಾರೆ.    ಭಾವ ಬತ್ತಿಹುದುಖುಷಿಯು ಸತ್ತಿಹುದು   ಬರದು ಮಧುರಗೀತೆ.            ದುಃಖ ಉಮ್ಮಳಿಸಿ           ಬಿಕ್ಕುತ್ತ ಹಾಡಿದರೆ           ಅದುವೆ ಚರಮಗೀತೆ.     ಹಾಡುಹಕ್ಕಿಯೆ ನಿನ್ನ    ಸ್ವಚ್ಛಂಧ ಬಂಧ    ನನ್ನ ಬದುಕಿಗಿಲ್ಲ.            ಬುವಿಯಂದ ಹೀರಿ           ಬಾನಗಲ ಹಾರಿ      .    ಹಾಡೆ ಖುಷಿಯ ಸೊಲ್ಲ. ***********   

ಕಾಡುವ ಹಕ್ಕಿ. Read Post »

You cannot copy content of this page

Scroll to Top