ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ಗಜಲ್ ವಿಶೇಷ

ಗಜಲ್ ತೇಜಾವತಿ ಹೆಚ್.ಡಿ. ಅನುಭವಿಸುವಿಯಾದರೆ ನನ್ನೆಲ್ಲಾ ನೋವುಗಳೂ ನಿನ್ನರಸಿ ಬಳಿಬರುವವು ಸಖದೂಷಿಸುವಿಯಾದರೆ ನನ್ನೊಲವಿನ ಕ್ಷಣಗಳೂ ನಿನ್ನನ್ನು ತೊರೆದೋಡುವವವು ಸಖ ರಕ್ಷಿಸುವಿಯಾದರೆ ನಿನ್ನ ತೋಳ್ತೆಕ್ಕೆಯಲಿ ಅಲುಗಾಡದೆ ಸ್ತಬ್ಧವಾಗಿರುವೆನುಭಕ್ಷಿಸುವಿಯಾದರೆ ನನ್ನಿರುವಿಕೆಯ ಸುಳಿವುಗಳೂ ಹಿಂಬಾಲಿಸದಿರುವವು ಸಖ ಪೂಜಿಸುವೆಯಾದರೆ ಪಯಣದುದ್ದಕ್ಕೂ ನಿನ್ನಡಿಗಳಿಗೆ ಮೆಟ್ಟಿಲಾಗಿ ನಿಲ್ಲುವೆನುಧಿಕ್ಕರಿಸುವಿಯಾದರೆ ನನ್ನಡಿಯ ಧೂಳು ಕಣಗಳೂ ಸೋಕದಿರುವವು ಸಖ ಗೌರವಿಸುವಿಯಾದರೆ ಮನದ ಮೂಲೆಯಾದರೂ ಸಾಕು ಅಸ್ತಿತ್ವಕ್ಕೆಅವಮಾನಿಸುವಿಯಾದರೆ ನೆನಪುಗಳು ಹೃದಯದಿಂದಲೇ ಬೇರುಸಹಿತ ಕಿತ್ತೊಗೆಯುವವು ಸಖ ಪ್ರೇಮಿಸುವಿಯಾದರೆ ನೂರು ದಿನದ ಬದುಕು ಮೂರೇ ಕ್ಷಣವಾದರೂ ತೃಪ್ತಿ ‘ತೇಜ’ದ್ವೇಷಿಸುವಿಯಾದರೆ ಸಹಸ್ರ ವರ್ಷಗಳೂ ಕೂಡ ಸಂಕೋಲೆಯ ತೊಡಿಸುವವು ಸಖ ನಯವಾದ ಹಂಗಿನ ಮಾತು ಕಿವಿಯ ಪೊಟರೆಯ ಹರಿಯುತಿದೆ ಸಾಕಿದ್ವೇಷಭರಿತ ನೋಟದ ಈಟಿ ಹೃದಯದ ಗೂಡನು ಇರಿಯುತಿದೆ ಸಾಕಿ ನಾಲಿಗೆ ತುದಿಯಲ್ಲಿನ ವ್ಯಂಗ್ಯ ನುಡಿಗಳು ಬೆಂಕಿಯ ಕಿಡಿಗಳಾಗಿವೆ ಈಗತಣ್ಣನೆಯ ಹಿಮವು ತನ್ನ ಗುಣವ ತೊರೆದು ಬಿಸಿಯೇರುತಿದೆ ಸಾಕಿ ಮಮಕಾರದ ಮಾಯೆ ಸರಿತಪ್ಪುಗಳ ದಾರಿಯನ್ನೇ ಕತ್ತಲಾಗಿಸಿದೆದೀಪ ತಾನುರಿದು ಬೆಳಕನೂಡುತ್ತಾ ಛಾಯೆಯಲಿ ಮರೆಯಾಗುತಿದೆ ಸಾಕಿ ಸಂಬಂಧದ ಬೇರುಗಳ ನಂಬಿಕೆಗಳು ಮಣ್ಣು ಪಾಲಾಗಿವೆ ಇಂದುಸಮಯಸಾಧಕತನ ಚಳಿಗೆ ತನ್ನ ಮೈ ಕಾಯಿಸುತಿದೆ ಸಾಕಿ ತುಟಿಯಂಚಿನ ಅಣುಕು ನಗೆ ಮುಖವಾಡದ ರಹಸ್ಯವನ್ನು ತೆರೆದಿಡುತ್ತಿದೆ ಇಲ್ಲಿಉಸಿರಾಡುತ್ತಿರುವ ದುರ್ಗಂಧ ಮನಸ್ಸಿನ ಕೋಣೆಯನ್ನು ಮಲಿನಗೊಳಿಸುತಿದೆ ಸಾಕಿ ತುಂಬಿರುವ ಸಿರಿಸಂಪತ್ತಿನಲ್ಲೂ ಏಕಾಂಗಿಭಾವ ಇಣುಕಿ ನೋಡುತ್ತಿದೆ ‘ತೇಜ’ಹತ್ತಲು ನೆರವಾದ ಏಣಿ ಗೆದ್ದಲಿಡಿದು ಭೂಮಿಯೊಳಗೆ ಲೀನವಾಗುತಿದೆ ಸಾಕಿ ****************************************

Read Post »

ಇತರೆ, ಗಜಲ್ ವಿಶೇಷ

ಗಜಲ್ ಪ್ರತಿಮಾ ಕೋಮಾರ ವೈಷಮ್ಯದ ಮನಸುಗಳ ಪ್ರೀತಿಯ ಮಾತಿನಿಂದ ಸೆಳೆಯಬೇಕು ನಾವುಒಡೆದ ಕನಸುಗಳ ಬೆಳಕಿನ ದೀಪವಿಟ್ಟು ಹೊಸೆಯಬೇಕು ನಾವು ತಾಳ್ಮೆಯಿಲ್ಲದ ಬದುಕು ಸರಿಯ ದಡ ಸೇರುವುದೇ?ವೃಕ್ಷದ ಫಲ ಹಣ್ಣಾಗಿ ಮಾಗುವವರೆಗೆ ಕಾಯಬೇಕು ನಾವು ಸುಖ ದುಃಖಗಳು ಎಲ್ಲರ ಜೀವನದ ಇಬ್ಬದಿಗಳುನೋವ ಕಂಗಳ ಸಾಂತ್ವನದ ಹಾಡಿನಿಂದ ನಗಿಸಬೇಕು ನಾವು ಸಾಧನೆಯ ಹಾದಿಯಲಿ ಮಲ್ಲಿಗೆಯ ಹಾಸಿರದು ಎಂದಿಗೂಎಡರು ತೊಡರುಗಳನ್ನು ಹಠದಿಂದ ಮೀರಿ ಜಯಿಸಬೇಕು ನಾವು ಹುಟ್ಟಿದ ಎಲ್ಲಾ ಜೀವಿಗಳು ಬಾಳ ಸವೆಸಿ ಹೋಗುವುವುಬಾಡಿದ “ಪ್ರತಿ “ಬದುಕ ಮಾಣಿಕ್ಯವಾಗಿಸಲು ಪ್ರಯತ್ನಿಸಬೇಕು ನಾವು ಶೂನ್ಯ ಹೃದಯವ ಹದವಾಗಿ ಪ್ರೀತಿಯೆರೆದು ತುಂಬಿಸುವವ ನೀನುಪಕ್ಕಕ್ಕಿಟ್ಟ ಕನಸುಗಳ ಹೊಸದಾಗಿ ಹೊಸೆದು ಬಿತ್ತುವವ ನೀನು ಧರೆಗೆ ಬಿದ್ದ ಬೀಜ ಮೊಳೆಯಲು ತೇವ ಬೇಕಲ್ಲವೇ?ಕೊನರಿದ ಆಸೆಗಳಿಗೆ ಉದಕವೆರದು ಚಿಗುರಿಸುವವ ನೀನು ಕಾವು ಹೆಚ್ಚಾದಂತೆ ಚಿಮ್ಮುವ ಚಿಲುಮೆಯು ಕೂಡಾ ಬತ್ತುವುದುಬದುಕ ಬಡಿದಾಟದಲ್ಲಿ ಭರವಸೆಯೆರೆದು ಬೇರಿಳಿಸುವವ ನೀನು ನಂಬಿಕೆಯೇ ನಾಶವಾದರೆ ನಡೆಗೆಲ್ಲಿಹುದು ಗತ್ತುಪ್ರತಿ ಹೆಜ್ಜೆಗೂ   ಧೈಯ೯ ತುಂಬಿ ನೇಹವೆರದು ನಡೆಸುವವನು ನೀನು ಹೃದಯಗಿಡಕಿ ತೆರೆದಿದ್ದರೆ ತಾನೇ ಗಾಳಿ,ಬೆಳಕು,ಗಂಧಮುಚ್ಚಿದ ಕವಾಟವ ಹಗುರಾಗಿ ಸರಿಸಿ ಚೈತನ್ಯವೆರೆದು ಬದುಕಿಸುವವ ನೀನು ***********************************

Read Post »

ಇತರೆ, ಗಜಲ್ ವಿಶೇಷ

ಗಜಲ್ ಸ್ಮಿತಾ ಭಟ್ ಎದೆಯ ಮಾತುಗಳು ಮೊರೆಯುತ್ತಿದೆ ನನಗೂ ನಿನಗೂ/ಅಂತರಂಗದ ಆಹ್ವಾನ ಹಿತನೀಡುತ್ತಿದೆ ನನಗೂ ನಿನಗೂ/ ಕಣ್ಣ ಗೊಳದಲಿ ನೂರಾರು ಕನಸುಗಳ ಚಲನವಲನನಭವ ತೋರಿಸಿ ಹಗುರಾಗಬೇಕಿದೆ ನನಗೂ ನಿನಗೂ/ ಆತುಕೊಂಡೇ ಬದುಕುವ ಹಂಬಲ ಕೆರಳುತ್ತದೆ ಕೆಲವೊಮ್ಮೆಸಾಕೆಂದು ಸರಿಸದೆ ಒಳಗೊಳ್ಳುವುದಿದೆ ನನಗೂ ನಿನಗೂ/ ಮೋಹದ ಸೆಳೆತಕೆ ಮನಸೋತ ವಾಂಛೆಯಲ್ಲವಿದು ಗೆಳೆಯಾಈಗಷ್ಟೇ ಹನಿಯಾಗಿದ್ದೇನೆ ಕಡಲಾಗುವುದಿದೆ ನನಗೂ ನಿನಗೂ/ ಪಯಣದ ತಿರುವುಗಳಿಗೆ ಹೆಸರಲಿಗೆಯ ಹಂಗೇಕೆ ದೊರೆಯೇಮರೆಯದೇ ಸರಿ ದಾರಿಯಲಿ ಕೂಡುವುದಿದೆ ನನಗೂ ನಿನಗೂ/ ಮೌನವಾಗಿದ್ದೇ ಮುನ್ನುಡಿ ಬರೆದಾಗಿದೆ ಬದುಕಿಗೆ ಓದಿ ಬಿಡುಇಲ್ಲಬಿಡು ಮಾತಾಗಿ ಮನಕದಡುವ ಇರಾದೆ ನನಗೂ ನಿನಗೂ/ ನಿಶ್ಚಿತವಾಗಿದೆ ಕಾಯಲೇಬೇಕೆಂಬ ತಪನೆ “ಮಾದವಾ”ಕೊಸರದಿರು ಜನ್ಮ ಜನ್ಮದ ಬೆಸುಗೆಯಿದೆ ನನಗೂ ನಿನಗೂ/ ನಿನ್ನ ಅಸಹನೆಯ ಒಂದು ತುಣುಕು ಸಾಕು ಬದುಕು ಸಾಕೆನಿಸಲು/ನಿನ್ನ ಒಲವಿನ ಒಂದು ಬಿಂದು ಸಾಕು ಕನಸು ತುಂಬಿಕೊಳ್ಳಲು/ ಪ್ರತಿ ಚಣವೂ ನಗುವೇ ಸ್ಪುರಿಸಬೇಕೆಂಬುದು ಅತಿಯಾಯಿತೇನುನಿನ್ನ ಇರುವಿಕೆಯ ಒಂದು ಛಾಯೆ ಸಾಕು ನಡೆದು ಸಾಗಲು/ ಮನವೇಕೆ ಸದಾ ತಹತಹಿಸುತ್ತದೆ ನಿನ್ನ ಅನುಪಸ್ಥಿತಿಯಲ್ಲಿಕಳೆದು ಹೋಗುವ ಒಂದು ಮಾತು ಸಾಕು ಮನಸು ಒಡೆಯಲು/ ಮುಗಿಲಿಗೆ ಹಗ್ಗ ಕಟ್ಟಿ ಜೀಕುವ ಹುಚ್ಚು ಸಾಹಸವೇಕೆ ಬೇಕುಭರವಸೆಯಲಿ ಚಾಚಿದ ಮರದ ಒಂದು ರೆಂಬೆ ಸಾಕು ಗೂಡು ಕಟ್ಟಲು/ ಅಂತರಂಗದ ಗಾಯಕ್ಕೆ ಒಲವ ಸವರುತ್ತಿರು “ಮಾಧವ”ನಿನ್ನದೊಂದು ಕುಡಿನೋಟ ಸಾಕು ಮೌನ ಮುರಿಯಲು/ *********************************

Read Post »

ಇತರೆ, ಗಜಲ್ ವಿಶೇಷ

ಗಜಲ್ ಪ್ರಭಾವತಿ ಎಸ್ ದೇಸಾಯಿ ವಿರಹದುರಿಗೆ ಜೀವವು ಪತಂಗದಂತೆ ಸುಟ್ಟು ಶವವಾಗಲಿ ರಾತ್ರಿಕಂಡ ಕನಸ ಹೂ ದಳಗಳು ಉದುರಿ ಉಸಿರು ಸಮಾಧಿಯಾಗಲಿ ರಾತ್ರಿ ಎದೆಭಾರವಾಗಿದೆ ನೆನಪಿನ ಗಂಟು ಹೊತ್ತು ಬಂಡಿ ಸಾಗಲಿ ರಾತ್ರಿಬದುಕು ಹಗುರಾಗಲು ಬೆಂದು ಉರಿವ ದೇಹಕೆ ತಂಬೆಳಕಾಗಲಿ ರಾತ್ರಿ ದಣಿದ ಕಣ್ಣ ರೆಪ್ಪೆಗಳು ನಿಂತು ನಿದ್ದೆಗೆ ಬೇಲಿಯಾಗಲಿ ರಾತ್ರಿಮಧುರ ಗಳಿಗೆಗಳ ಕಾಯುವ ಹೃದಯಗಳು ಒಲಿದು ಒಂದಾಗಲಿ ರಾತ್ರಿ ಮನದಾಳದಲ್ಲಿ ಎದ್ದ ಪ್ರಶ್ನೆಗಳಿಗೆ ಉತ್ತರವಾಗಲಿ ರಾತ್ರಿನೊಂದ ಜೀವಿಗಳಿಗೆ ಜಗದ ಎಲ್ಲ ಸುಖವು ಅನುಭವವಾಗಲಿ ರಾತ್ರಿ ಅಗಲಿಕೆ ನೋವು ಹೊದ್ದ ಮೌನ ಸರಿಯಲು ತಂಗಾಳಿಯಾಗಲಿ ರಾತ್ರಿಅಲೆವ ಜೋಗಿಗೆ ಚಂದಿರ”ಪ್ರಭೆ”ಮುಗಿಲ ಪಲ್ಲಂಗವಾಗಲಿ ರಾತ್ರಿ ಉಸಿರು ಉಸಿರಲಿ ಬೆರೆಸಿ ನಾದ ಹೊರಡಿಸಿದವನೆ ಎಲ್ಲಿ ಮರೆಯಾದೆಒಲಿದ ಹೃದಯ ವೀಣೆ ಮೀಟಿ ಭಾವತುಂಬಿದವನೆ ಎಲ್ಲಿ ಮರೆಯಾದೆ ಯಮುನೆಯ ಅಲೆಗಳು ಎದೆ ಉಸಿರಾಟ ಏರಿಳಿತ ಎಣಿಸುತಿವೆ ನೋಡುವಿರಹ ತಾಪದಲಿ ಮನ ಕಮಲ ಬಾಡಿಸಿದವನೆ ಎಲ್ಲಿ ಮರೆಯಾದೆ ಯುಗ ಯುಗಗಳಿಂದ ರಾಧೆ ಯಂತೆ ಆರಾಧಿಸುತಿರುವೆ ನಿನ್ನನ್ನುಜನುಮ ಜನುಮದ ಪ್ರೀತಿ ಬೆಸುಗೆ ಕಳಚಿದವನೆ ಎಲ್ಲಿ ಮರೆಯಾದೆ ಅನುರಾಗದ ಎಳೆ ಎಳೆಯಿಂದ ಹೆಣೆದ ಒಲವಿನ ಶಾಲು ಹೊದ್ದಿರುವೆಪ್ರೇಮಿಗಳನು ಜನ ದೂರುವಂತೆ ಮಾಡಿದವನೆ ಎಲ್ಲಿ ಮರೆಯಾದೆ ಪ್ರೇಮದ ಹಣತೆ ಬತ್ತಿ ಕ್ಷೀಣಿಸದಂತೆ ಕಾಯಬೇಕು ಬಾಳಿನಲಿಒಲವ ತೈಲ ಹಾಕದೆ “ಪ್ರಭೆ” ನಂದಿಸಿದವನೆ ಎಲ್ಲಿ ಮರೆಯಾದೆ **************************

Read Post »

ಇತರೆ, ಗಜಲ್ ವಿಶೇಷ

ಗಜಲ್ ಮದುಶಾಲೆಯ ಹೊಸ್ತಿಲಲ್ಲಿ…

ವಿಶೇಷ ಲೇಖನ ಗಜಲ್ ಮದುಶಾಲೆಯ ಹೊಸ್ತಿಲಲ್ಲಿ… ಡಾ. ಮಲ್ಲಿನಾಥ ಎಸ್. ತಳವಾರ        ಪ್ರೀತಿಯೇ ಈ ಜಗದ ಸುಂದರ ಬುನಾದಿ. ಎಲ್ಲ ಚಟುವಟಿಕೆಗಳಿಗೆ ಹೃದಯ ಬಡಿತದ ಪಿಸುಮಾತೆ ಕಾರಣ. ಸ್ಪರ್ಶಕ್ಕೂ ಎಟುಕದ ಅನುಭವಗಳೆಲ್ಲವನ್ನು ಕಟ್ಟಿಕೊಡುವುದೆ ಸಾಹಿತ್ಯ. ಆ ಸಾಹಿತ್ಯದ ಸಸಿಗೆ ನಮ್ಮ ಭಾವನೆಗಳೆ ವರ್ಷಧಾರೆ..!! ಭಾವಗಳ ಸಂಗಮವೇ ಆ ಅಕ್ಷರ ಅಕ್ಷಯ ಪಾತ್ರೆ. ಸುಂದರ ಸಮಾಜದ ಪ್ರತಿಬಿಂಬವನ್ನು ಪ್ರತಿನಿಧಿಸುವ ದರ್ಪಣವೇ‌ ಈ ಅಕ್ಷರ ಲೋಕ..!! ಇದೊಂದು ಭಾವನೆಗಳ ಕಲ್ಪನಾತ್ಮಕ ಪರಪಂಚ. ಇದು ಕ್ರಿಯಾಶೀಲತೆ, ಭಾಷೆ, ವರ್ಣಗಳು ಮತ್ತು ಛಂದಸ್ಸಿನ ಸುಂದರ ಆಪ್ತವಾದ ಹೊದಿಕೆಯನ್ನು ಹೊಂದಿರುತ್ತದೆ. ಇದು ಸಮಾಜದ ಹಿತವನ್ನು ಕಾಪಾಡುವ ಪರಂ ಜ್ಯೋತಿ. ಈ ಹೊಂಗಿರಣದಿಂದ ಯಾವ ವಿಷಯವೂ ಹೊರತಾಗಿ ಉಳಿದಿಲ್ಲ, ಉಳಿಯಲು ಸಾಧ್ಯವೂ ಇಲ್ಲ. ಅನನ್ಯ ಪಂಚೇಂದ್ರಿಯಗಳ ಅನುಪಮ ಅನುಭವವನ್ನು ಉಣಬಡಿಸುವ ಭಾಷೆಯ ಸಾಂಗತ್ಯದಲ್ಲಿ ಹೆಜ್ಜೆ ಹಾಕುವ ಸಾಹಿತ್ಯಕ್ಕೆ ಯಾವುದೆ ನಿರ್ದಿಷ್ಟವಾದ ಭಾಷೆಯ, ಗಡಿಯ ಸೀಮೆಯಿಲ್ಲ. ನಮ್ಮ ಕನ್ನಡದ ಅರ್ವಾಚೀನ ಸಾಹಿತ್ಯದ ಉದ್ಯಾನದಲ್ಲೊಮ್ಮೆ ವಿಹರಿಸಿದಾಗ ಸಂಸ್ಕೃತ ಭಾಷೆಯ, ಸಂಸ್ಕೃತ ಸಾಹಿತ್ಯದ ದಟ್ಟ ಪ್ರಭಾವ ಅಂದು ಇರುವುದನ್ನು ಗಮನಿಸಬಹುದು. ಮುಂದೆ ೧೨ನೇ ಶತಮಾನದಲ್ಲಿ ಶಿವಶರಣರ ಕಾಲಘಟ್ಟದಲ್ಲಿ ಪಾದರಸದಂತಹ ಸಾಹಿತ್ಯ ರೂಪ ‘ವಚನ’ ವು ರಾಷ್ಟ್ರೀಯ ಹಾಗೂ ಅಂತರ ರಾಷ್ಟ್ರೀಯ ಸಾರಸ್ವತ ಲೋಕದಲ್ಲಿ ಸಂಚಲನವನ್ನು ಸೃಷ್ಟಿಸಿತು..ತಿರುವಿನ ಆ ಕಾಲ ಗರ್ಭದಲ್ಲಿ ನವ್ಯ, ಆಧುನಿಕ ಕನ್ನಡಕ್ಕೆ ಪಾಶ್ಚಿಮಾತ್ಯ ಸಾಹಿತ್ಯವೇ ನಂದಾದೀಪವಾಯಿತು. ಈ ನೆಲೆಯಲ್ಲಿ ಚಿಂತನೆ ಮಾಡಿದಾಗ ಸಾಹಿತ್ಯವು ನಿರಂತರವಾಗಿ ಚಲಿಸುತ್ತಿರುತ್ತದೆ ಎಂದೆನಿಸದೆ ಇರದು.         ಈ ಹಿನ್ನೆಲೆಯಲ್ಲಿ ‘ಗಜಲ್’ ಕಾವ್ಯ ಪ್ರಕಾರವು ಮನವನ್ನು ಮೆದುವಾಗಿ ಸ್ಪರ್ಶಿಸುತ್ತದೆ. ಈ ಕಾರಣಕ್ಕಾಗಿಯೇ ಗಜಲ್ ನ ಅರ್ಥ, ಹುಟ್ಟು, ಛಂದೋಲಕ್ಷಣಗಳು, ವೈವಿಧ್ಯತೆಗಳು ಹಾಗೂ ಅದರ ಪ್ರಕಾರಗಳ ಕುರಿತು ಅರಿಯುವುದು ತುಂಬಾ ಮುಖ್ಯ. ಈ ಗಜಲ್ ಶಬ್ಧದ ಇತಿಹಾಸವು ನಮ್ಮನ್ನು ದಕ್ಷಿಣ ಏಷ್ಯಾದ ಅರಬ್ ನ ಸುಂದರ ಮರಭೂಮಿಯತ್ತ ಕರೆದೊಯ್ಯುತ್ತದೆ. ‘ಗಜಲ್’ ಪದ ಮೂಡಿ ಬಂದದ್ದು ಅರೆಬಿಕ್ ಭಾಷೆಯಿಂದ. ಈ ಪದದ ನಿಷ್ಪತ್ತಿ ಕುರಿತು ಹೀಗೆ ಹೇಳಲಾಗಿದೆ. ಗಜಲುನ್, ಗಜಾಲ್, ಗಿಜಾಲ್ ಪದಗಳಿಂದ ಬಂದಿರಬಹುದು ಎನ್ನಲಾಗುತ್ತಿದೆ. ‘ಗಜಲುನ್’ ಎಂದರೆ ಮೋಹಕ ಸನ್ನೆಗಳಿಂದ ಹೆಂಗಸರೊಡನೆ ಮಾತನಾಡುವುದು ಎಂದು. ‘ಗಜಾಲ್’ ಎಂದರೆ ಹೆಣ್ಣಿಗೆ ಹೋಲಿಸಿ ಇಡುವ ಹೆಸರು ಅಥವಾ ಜಿಂಕೆ ಕಣ್ಣಿನ ಆಕರ್ಷಕ ತೀಕ್ಷ್ಣ ಬುದ್ಧಿಯ ಹೆಣ್ಣು. ‘ಗಿಜಾಲ್’ ಎಂದರೆ ಜಿಂಕೆ. ಈ ಹಿನ್ನೆಲೆಯಲ್ಲಿ “ಜಿಂಕೆ ಅನುಭವಿಸುವ ಆರ್ತನಾದ ಬೇಟೆಗಾರನಿಂದ ತಪ್ಪಿಸಿಕೊಂಡು ಸ್ವತಂತ್ರವಾಗುವ ನೋವೆ” ಗಜಲ್ ನ ಮೂಲ ಎಂಬ ೭ನೆ ಶತಮಾನದ ಗಜಲ್ ತಜ್ಞ ಶಮ್ಸ್ ಕೈಸ್ ರಾಜಿ ಯವರ ಹೇಳಿಕೆಯನ್ನು ಸ್ಮರಿಸಬಹುದು. ಇದರೊಂದಿಗೆ ಡಾ. ಅಬ್ದುರಶೀದ್ ಎ. ಶೇಖ್ ರವರು ತಮ್ಮ ಗಜಲ್ ಸೌಂದರ್ಯ ಮೀಮಾಂಸೆ ಯಲ್ಲಿ ದಾಖಲಿಸಿರುವುದನ್ನು ಇಲ್ಲಿ ಗಮನಿಸುವುದು ಸೂಕ್ತ. ಗಜಲ್ ಎನ್ನುವುದು ಮುಗಾಜೆಲಾತ, ತಗಜ್ಜುಲ್ ಪದಗಳಿಂದ ಬಂದಿದೆ ಎಂದು ಹೇಳಿದ್ದಾರೆ. ಈ ಪದಪುಂಜಗಳ ಅರ್ಥ ಪ್ರೇಮಿಗಳ ಮಾತುಕತೆ, ಸರಸ-ಸಲ್ಲಾಪ, ಹೆಂಗಸರ ಕುರಿತು ಮಾತು…. ಎಂದೆಲ್ಲಾ ಅರ್ಥೈಸಲಾಗುತ್ತಿದೆ. ಕ್ರೌಂಚ ಹಕ್ಕಿಗಳ ವಿಹ್ವಲತೆ, ದೀನ ನೋವು, ಆರ್ತನಾದವು ಮಹಾಕಾವ್ಯ ‘ರಾಮಾಯಣ’ ದ ಉದಯಕ್ಕೆ ಕಾರಣವಾಗಿರುವುದನ್ನು ಇಲ್ಲಿ ಮೆಲುಕು ಹಾಕಬಹುದು. ಈ ಅರ್ಥದಲ್ಲಿ ಕರುಣಾರಸ ತುಂಬಿದ ಮಧುಬಟ್ಟಲೆ ಈ ಬರಹದ ಸ್ಥಾಯೀ ರೂಪ. ಇದು ಸಾಹಿತ್ಯ ರೂಪವಾಗಿ ಬೆಳೆದು ಬಂದದ್ದು ಮಾತ್ರ ಇರಾನಿನ ಪರ್ಷಿಯನ್ ಭಾಷೆಯಲ್ಲಿ. ಇದಕ್ಕೆ ಕಾರಣವೂ ಇಲ್ಲದಿಲ್ಲ. ಅರಬರು ಇರಾನ್ ದೇಶವನ್ನು ಹಲವು ವರ್ಷಗಳ ಕಾಲ ಆಳಿದರು. ಇದರಿಂದ ಸಹಜವಾಗಿಯೇ ಅರಬರ ಭಾಷೆ, ಕಾವ್ಯಗಳ ಪ್ರಭಾವ ಇರಾನರ ಮೇಲೆ ಆಯಿತು. ಪರ್ಷಿಯನ್ ಭಾಷೆಯ ಪ್ರಕಾರ ‘ಗಜಲ್’ ಎಂದರೆ ಭಾವಗೀತೆ, ಪ್ರೇಮಗೀತೆ, ಹಾಡು, ಪ್ರಗಾಥ ಎಂದಾಗುತ್ತದೆ. ನಂತರ ಮೂಲವಾಗಿ ಸುಂದರವಾಗಿ ಇರುವ ಉರ್ದುವಿನಲ್ಲಿ ಹಾಲು-ಜೇನಿನ ಸಂಗಮದಂತೆ ತನ್ನ ಪಾರುಪತ್ಯವನ್ನು ಸ್ಥಾಪಿಸಿರುವುದು ಇವಾಗ ಇತಿಹಾಸ..!!      ಇಂತಹ ಗಜಲ್ ನ ವಿಕಾಸ ತುಂಬಾನೆ ಕುತೂಹಲಕಾರಿಯಾಗಿದೆ.  ಅರಬ್ ನ ೬ ನೇ ಶತಮಾನದ ಅರಬ್ಬಿ ಪದ್ಯ “ಕಸೀದ” ದಿಂದ ಇದು ಹುಟ್ಟಿರಬಹುದು ಎಂದು ಕೆಲವರು ಹೇಳಿದರೆ, ಪಾಕಿಸ್ತಾನದ ಕವಿ, ವಿಮರ್ಶಕ ವಜೀರ್ ಆಗಾ ಅವರು ಫಾರಸಿ ಭಾಷೆಯ ಜಾನಪದ ಕಾವ್ಯ “ಚಾಮ” ದಿಂದ ಹುಟ್ಟಿದೆ ಎಂದು ಹೇಳುತ್ತಾರೆ. ‘ಕಸೀದ’ ವ್ಯಕ್ತಿ ಪ್ರಶಂಸೆ, ದಾರ್ಶನಿಕತೆ, ಜನರನ್ನು ಉತ್ಸಾಹಗೊಳಿಸುವ ವಿಷಯಗಳಿಂದ ಕೂಡಿದ ಒಂದು ಧೀರ್ಘ ಖಂಡ ಕಾವ್ಯ. ಇಲ್ಲಿ ರಾಜನ ಹೊಗಳಿಕೆ ಮತ್ತು ರಾಜನ ಮನೋಭಿಲಾಸೆಯೆ ಮುಖ್ಯವಾಗುತಿತ್ತು. ಈ ಹಿನ್ನೆಲೆಯಲ್ಲಿ ಗಮನಿಸುವುದಾದರೆ ಶಬಾಬ್, ಶರಾಬ್ ಮತ್ತು ಕಬಾಬ್ ಕಸೀದದ ಸ್ಥಾಯಿ ಭಾವ ಆಗಿದ್ದವು ಎನ್ನುವುದರ ಜೊತೆಗೆ ಅರಸೊತ್ತಿಗೆಯ ಸಂಕೇತವಾಗಿದ್ದವು ಎಂಬುದು ಅಂದಿನ ಕಾಲಚಕ್ರವನ್ನು ಪ್ರತಿನಿಧಿಸುತ್ತದೆ.  ಜೊತೆ ಜೊತೆಗೆ ಇವು ವಿಲಾಸಿ ಜೀವನವನ್ನು ಬಿಂಬಿಸುತ್ತವೆ. ಈ ಕಾರಣಕ್ಕಾಗಿಯೇ ಅಂದಿನ ಕವಿಗಳು ತಮಗೆ ಇಷ್ಟವಿಲ್ಲದಿದ್ದರೂ ರಾಜ- ಮಹಾರಾಜರನ್ನು ಹೊಗಳುತ್ತಿದ್ದರು. ಕೆಲವರಂತೂ ತಮ್ಮ ಉಪಜೀವನಕ್ಕಾಗಿಯೂ ಬರೆಯುತ್ತಿದ್ದರು..!! ಕಸೀದದ ಪೀಠಿಕಾ ದ್ವಿಪದಿ ಎಂದರೆ ‘ತಷಬೀಬ್’ ಪ್ರೀತಿ, ಪ್ರೇಮ ಭಾವಾಭಿವ್ಯಕ್ತಿಯನ್ನು ಒಳಗೊಂಡಿರುತ್ತದೆ. ಪೀಠಿಕೆಯ ದ್ವಿಪದಿ/ ಷೇರ್ ಗಳನ್ನು ಎತ್ತಿ ಬೇರೆ ಮಾಡಿ ಅವುಗಳಿಗೆ ಗಜಲ್ ಎಂದು ಕರೆಯಲಾಯಿತು. ಇದರೊಂದಿಗೆ ಇರಾನ್ ದೇಶದ ಹಳ್ಳಿಗಳಲ್ಲಿ ಹೆಂಗಸರು ರಚಿಸಿ ಹಾಡುತ್ತಿದ್ದ ‘ಚಾಮ’ ಎಂಬ ಜಾನಪದ ಕಾವ್ಯ ಪ್ರಕಾರ ದಿಂದ ಗಜಲ್ ಹುಟ್ಟಿದೆಯೆಂದೂ ಹೇಳಲಾಗುತ್ತಿದೆ. ಇರಾನ್ ದೇಶವು ಅತಿಥಿಗಳ ಸತ್ಕಾರಕ್ಕೆ ತುಂಬಾ ಹೆಸರುವಾಸಿ. ತಮ್ಮ ಮನೆಗೆ ಬಂದ ಅತಿಥಿಗಳ ಮನೋರಂಜನೆಗಾಗಿ ಹಾಡು ಕಟ್ಟಿ ಹಾಡುತ್ತಿದ್ದರು. ಆ ನೆಲೆಯಲ್ಲಿ ಚಾಮ ಕಾವ್ಯವೂ ಹೌದು, ಸಂಗೀತವೂ ಹೌದು. ಇರಾನ್ ದೇಶದ ಹಳ್ಳಿಗಳಲ್ಲಿ ಅದು ಬಹಳ ಜನಪ್ರಿಯವಾಗಿತ್ತು,  ಅತ್ಯಂತ ಮನೋಹರವಾಗಿತ್ತು. ಈ ಸೆಲೆಯಲ್ಲಿ “ಗಜಲ್ ಸ್ವಭಾವತಃ ಗೀತದ ಬುನಾದಿಯ ಮೇಲೆ ನಿಂತಿರುವುದರಿಂದ ಗಜಲ್ ಅನ್ನು ಅರಬ್ಬಿ ತಷಬೀಬ್ (ಕಸೀದ್ ದ ಪೀಠಿಕೆ) ದಿಂದ ಹುಟ್ಟಿತು ಎನ್ನುವುದಕ್ಕೆ ಬದಲಾಗಿ ಅದನ್ನು ಇರಾನದ ಚಾಮ ಕಾವ್ಯಕ್ಕೆ ಸಂಬಂಧ ಪಟ್ಟುದೆಂದು ಹೇಳುವುದು ಸೂಕ್ತ” ಎಂಬ ಪಾಕಿಸ್ತಾನದ ಕವಿ, ವಿಮರ್ಶಕ ಡಾ. ವಜೀರ್ ಆಗಾರವರ ಹೇಳೀಕೆ ಮುಖ್ಯವೆನಿಸುತ್ತದೆ. ‌        ಈ ಗಜಲ್ ಎನ್ನುವುದು ಮುಂಜಾವಿನ, ನಸುಕಿನ ಸಮಯದ ಸವಿ ನಿದ್ದೆ, ಕಂದಮ್ಮಗಳ ನೆಚ್ಚಿನ ಚಂದಮಾಮ, ತಾಯಿಯ ವಾತ್ಸಲ್ಯಮಯ ಲಾಲಿ ಹಾಡು ಹಾಗೂ ಅಬಲೆಯರ ಆಕ್ರಂದನವನ್ನೂ ಸಶಕ್ತವಾಗಿ ಅಭಿವ್ಯಕ್ತಿಸುತ್ತದೆ. ಇದೊಂದು ಪ್ರೀತಿಸುವ ಜೀವಿಗಳ ಭಾವಪರವಶತೆಯ ಸುಂದರ ಸಂಭ್ರಮ. ಇದು ನಿರಂತರವಾದ ಮತ್ತು ಆಳವಾದ ಅನುಭೂತಿಯನ್ನು ಸಹ ನೀಡುತ್ತದೆ. ಅಂತೆಯೇ “Ghazal is all about desire, Journey to love and light” ಎಂದು ಹೇಳಲಾಗುತ್ತದೆ. ಈ ಕಾರಣಕ್ಕಾಗಿಯೇ ಗಜಲ್ ಇಂದು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಕಾವ್ಯಗಳ ರಾಣಿ ಎಂಬ ನವಿಲು ಗರಿಯನ್ನು ಹೊತ್ತು ನಿಂತಿದೆ. ****************************************

ಗಜಲ್ ಮದುಶಾಲೆಯ ಹೊಸ್ತಿಲಲ್ಲಿ… Read Post »

ಇತರೆ, ಜೀವನ

ಬದುಕು ಎಷ್ಟೊಂದು ಸುಂದರ

ಲೇಖನ ಚಿಕ್ಕ ಪುಟ್ಟ ಸಂಗತಿಗಳಲ್ಲೇ ಸಂತೃಪ್ತಿ ಕಾಣುತ್ತಿರಿ ಆಗ ಬದುಕು ಎಷ್ಟೊಂದು ಸುಂದರ. ಪಲ್ಲವಿ ಪ್ರಸನ್ನ ಬೆಳಗಾಗಲೆoದೆ ಕತ್ತಲು ,ಗೆಲ್ಲಲೆoದೆ ಸೋಲು,ನಗುವಿನ ಜೊತೆ ದುಃಖ ಇದ್ದೇ ಇರುತ್ತದೆ ,ಅದರೂ ಚಿಕ್ಕ ಪುಟ್ಟ ಸಂಗತಿಗಳಲ್ಲೇ ನಾವು ಆನಂದ ಅನುಭವಿಸುತ್ತೇವಲ್ಲ ಅದು ನಮಗೆ ಅಪ್ಪಟ ಆರೋಗ್ಯ ,ಉಲ್ಲಾಸಿತರಾಗಿಡಲು ಸಹಾಯಮಾಡುತ್ತದೆ. ತಲೆ ಬಾಚಿಕೊಳ್ಳುವಾಗ ಉದುರಿದ ಕೂದಲ ಬಗ್ಗೆ  ಕೊರಗದೇ ಇದ್ದ ಕೂದಲನ್ನು ನೇವರಿಸುತ್ತ ಅದರ ಆರೈಕೆಯಲಿ ಮಗ್ನವಾಗಿ ಖುಷಿ ಅನುಭವಿಸಬೇಕು. ಒಂದು ಒಳ್ಳೆ ಪುಸ್ತಕವನ್ನು ಓದುವಾಗ ಅದರ ಇಂಚಿಂಚೂ ,ಪ್ರತೀ ಸಾಲನ್ನೂ ಸವಿಯುತ್ತ ಅದರಲ್ಲಿ ನಿಮ್ಮ ಪರಕಾಯ ಪ್ರವೇಶವಾಗುವಂತೆ ಓದಿದರೆ ಆ ಓದಿನಲ್ಲೂ ಒಂಥರಾ ನಿರಾಳ.ಆಕಳು ಕರೆಯುವಾಗಲೂ ಸಹ ಹಾಡುಹೇಳಿಕೊಳ್ಳುತ್ತಾ ಅದರ ಮೈ ದಡವಿ ,ಅದ್ಭುತ ಅನುಭವ ನಿಮಗಾಗುತ್ತದೆ. ಮಗು ನೀವೊಬ್ಬರೆ ಇರುವಾಗ ಅಪ್ಪಿಕೊಂಡು ಮುದ್ದು ಮಾಡುವುದ ಅನುಭವಿಸಿ ನೋಡಿ ಅದು ಬಿಟ್ಟು ನನಗೆ ಕೆಲಸ ಇದೆ ಹೋಗೋ ಆಚೆ ಎಂದು ದೂರ ತಳ್ಳಿದರೆ ಪಾಪ ಮಗುವಿಗೂ ಬೇಸರ ನಿಮಗೂ ಕಳವಳ.ನನ್ನ ಮಗನಿಗೆ ನಾನು ಅವನು ಮಲಗಿ ನಿದ್ರಿಸುವಾಗ ಸಣ್ಣದಾಗಿ ಮುತ್ತು ಕೊಡಬೇಕೆನಿಸುತ್ತದೆ ,ನನ್ನ ಯಜಮಾನರು ಮಲಗಿರುವವನ ಏಕೆ ಮುದ್ದೀಸ್ತೀಯಾ ಅಂತ ಬಯ್ದರೂ ಮೆಲ್ಲಗೆ ಎಚ್ಚರ ಆಗದಂತೆ ಪಪ್ಪಿ ಕೊಡುತ್ತೇನೆ .ಇದರಲ್ಲೇ ಏನೋ ಒಂಥರಾ ಹಿತ .ನೀವೂ ಅನುಭವಿಸಿ ನೋಡಿ. ಹಾಗೆಯೇ  ತರಕಾರಿ ಗಿಡಕ್ಕೆ ನೀರುಣಿಸುವುದು, ಹೂವಿನ ಗಿಡದ ಆರೈಕೆಯಲ್ಲಿ ಹೂವು ನಳ ನಳಿಸುವಂತಾದರೆ ಅದರ ಸೌಂಧರ್ಯವನ್ನು ಆಸ್ವಾಧಿಸುತ್ತ ,ನಮಗೆ ಎಷ್ಟು ಸಮಯವಿದ್ದರೂ ಅದು ಕಡಿಮೆಯೇ, ಹಾಗೆಯೇ ಏನಾದರೂ ಬರೆಯುವ ಹವ್ಯಾಸವಿದ್ದರೆ ಒಂಟಿಯಾಗಿ ಕುಳಿತು ಅನುಭವಿಸಿ ಬರೆದಾಗ ನಾಲ್ಕು ಜನರು ಚೆಂದ ಬರಿದ್ಯೆ ಎನ್ನುವ ಮಾತು ನಮ್ಮಲ್ಲಿ ಸಾರ್ಥಕ್ಯ ಭಾವನೆ ,ಸ್ಫೂರ್ತಿ ಮೂಡಿಸುತ್ತದೆ .ಇಷ್ಟೆಲ್ಲದರ ಮಧ್ಯೆ ನಮಗೆ ಬೇರೆಯವರ ಸುದ್ಧಿ ಹೇಳಲು ,ಕೇಳಲು ಸಮಯವೂ ಇರುವುದಿಲ್ಲ,ಇದ್ದರೂ ಇದು ಕಾಲ ಹರಣದ ಜೊತೆ ನಮ್ಮ ನೋವಿಗೆ ಕಾರಣ. ಯಾರೇನೆಂದರೂ ಒಂಟಿಯಾಗಿ ನಮ್ಮ ಚಟುವಟಿಕೆಯಲ್ಲಿ ತೊಡಗುವುದೇ ಉತ್ತಮ. ಮೌನಕ್ಕಿಂತ ಸುಂದರ ಮಾತಿಲ್ಲ.ಕಾಡಿ ಬೇಡಿ ಪಡೆಯುವ ಮಿತ್ರರಿಗಿಂತ ,ನೆರೆ ಹೊರೆ ಯವರಿಗಿಂತ ನಿಸರ್ಗ ತುಂಬಾ ನಿಸ್ವಾರ್ಥಿ ,ಅದು ನಮಗೆ ಏನೆಲ್ಲ ಕೊಟ್ಟಿತು ,ಏನೂ ಬಯಸುವುದಿಲ್ಲ ,ನಿಮ್ಮದೇ ತೋಟ ಇದ್ದರೆ ಒಂದು ಸುತ್ತು ತಿರುಗಿ ಹಸಿರನ್ನು ಆಸ್ವಾದಿಸಿ . ಇನ್ನೂ ಅಡಿಗೆ ಕೂಡಾ ಪ್ರೀತಿಯಿಂದ ಮಾಡಿ ಬಡಿಸಿ ,ಅದರಲ್ಲಿ ಮನೆಯ ಜನಗಳ ತೃಪ್ತಿ ಗಮನಿಸಿ ಇದರಿಂದ ನೀವು ಊಟ ಮಾಡದಿದ್ದರೂ ನಿಮ್ಮ ಹೊಟ್ಟೆ ತುಂಬುತ್ತದೆ. ಸದಾ ಒಂದಲ್ಲಾ ಒಂದು ಕೆಲಸದಲ್ಲಿದ್ದರೆ ಯಾವ ಚಿಂತೆ ನೋವು ನಮಗೆ ಬಾಧಿಸುವುದಿಲ್ಲ.ಇದು ನಾನು ಕಂಡು ಕೊಂಡ ಸತ್ಯ. ಇದೇ ಅನಿವಾರ್ಯ,ಇದೇ ಸತ್ಯ,ಇದೇ ಜೀವನ ಎಂದು ನಮ್ಮ ಮನಸ್ಸಿಗೆ ನಾವೇ ಸಾಂತ್ವನಿಸುತ್ತ ಅಳುಕನ್ನು ದೂರ ಮಾಡುತ್ತಾ ಅಲ್ಲೊಂದು ಶಾಂತಿ,ಪ್ರೀತಿ ,ಸಹನೆಯ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು.ಆವಾಗ ನಿಮ್ಮ ಜೀವನ ಸದಾ  ಸುಂದರವಾಗಿರುತ್ತದೆ. *************************************

ಬದುಕು ಎಷ್ಟೊಂದು ಸುಂದರ Read Post »

ನಿಮ್ಮೊಂದಿಗೆ

ಗಜಲ್

ಗಜಲ್ ಶೈಲಜಾ.ವಿ.ಕೋಲಾರ ಊರಿಗೆ ಊರೇ ಬೆಂಕಿಯಲ್ಲಿ ಬೇಯುತ್ತಿದೆ ಕಾಯುವರಾರಿಲ್ಲಿಜಾತಿಗೆ ಜಾತಿ ಜಿದ್ದಾಜಿದ್ದಿ ಶಾಂತಿ ಸೊರಗುತ್ತಿದೆ ಕಾಯುವರಾರಿಲ್ಲಿ ಕಳೆ ಬೆಳೆದ ಹೊಲದಲ್ಲಿ ಬೆಳೆ ಬೆಳೆಯಲು ಜಾಗವುಂಟೇಕೂಳಿಲ್ಲದ ಹಸುಳೆಯ ಕೂಗು ಒಣಗುತ್ತಿದೆ ಕಾಯುವರಾರಿಲ್ಲಿ ಸ್ವಸ್ಥ ಸಂದೇಶ ಹೊತ್ತುಬಂದ ಬಿಳಿ ಪಾರಿವಾಳ ಕೆಂಪಾಗಿ ಹಾರುತ್ತಿದೆಗಾಯ ಒಸರುವ ರಕ್ತಕೆ ಗಾಳಿ ಗೋಳಾಡುತ್ತಿದೆ ಕಾಯುವರಾರಿಲ್ಲಿ ಮೇಲು ಕೀಳೆಂಬ ಬೇರು ಬಲವಾಗಿ ಮತ ಧರ್ಮ ಸಿಟಿಲೊಡೆದಿದೆಊರ ಕೆರೆ ಜಾಲಿ ಮರದ ಮುಳ್ಳು ನಂಜೇರುತ್ತಿದೆ ಕಾಯುವರಾರಿಲ್ಲಿ ಹಲವು ಹೂಗಳು ಒಂದೇ ಮಾಲೆಯಲಿ ನೋಟ ಸೆಳೆದಿವೆಕುರಬುವ ಕೈಗೆ ಮಾತಿಲ್ಲದ ಶೈಲವೂ ನೋಯುತ್ತಿದೆ ಕಾಯುವರಾರಿಲ್ಲಿ ***************************

ಗಜಲ್ Read Post »

ಕಾವ್ಯಯಾನ

ಪವರ್ ಲೂಮ್…!

ಪವರ್ ಲೂಮ್…!(ನೇಕಾರನ ಸ್ವಗತ) ಡಾ. ಅರಕಲಗೂಡು ನೀಲಕಂಠ ಮೂರ್ತಿ ಹೊತ್ತು ಕೂಡ ಮೂಡದ ಹೊತ್ತಿಗೆಈಜುಗಾರ ತುಂಬು ಹೊಳೆ ಧುಮಿಕಿದ ಹಾಗೆ,ಮೈಮುರಿವ ಆಯಾಸದಲುಒಂದು ದಿನ ತಪ್ಪದ ಹಾಗೆಗುಂಡಿಯೊಳು ಇಳಿದರಾಯ್ತು – ಕಾಲೊದರಿ…‘ತನ್ನ ಪುಟ್ಟ ಎಳೆಯ ಹಾಸುಹೊಕ್ಕಲಿನೂಲಿಗೇ ಅರಿವೆ ನೇಯುವ ಸಿರಿಲಾಳಿಗೋ ಮುಗಿಲಂತೆ ಗುಡುಗಿಹರಿದೋಡುವ ತವಕ!’ ನೇಯುವುದುನಮಗೆ ಅಂತರಂಗದಲಿ ಒಪ್ಪಿಅಪ್ಪಿದ ಕಸುಬುಹಗಲಿರಲಿ ಇರುಳಿರಲಿಅಥವ ನಡುರಾತ್ರಿಯೇ ಇರಲಿಬೆತ್ತಲೆ ಬೆಚ್ಚಗೆ ಮುಚ್ಚುವ ಬದುಕಲಿಮನೆಯ ಒಬ್ಬೊಬ್ಬರಿಗೂ ಕೈತುಂಬ ಕೆಲಸ!ಇಷ್ಟಾದರೂ ಒಂದೆರಡು ನವೆದ ಅಂಗಿತೇಪೆಯಾದ ಪಂಚೆ ನಮ್ಮೊಡಲ ಮುಚ್ಚಲುಒಳಗಿರದು ಒಂದು ಕಾಚ ಎಂದೂ! ದಢಕ್ಕನೆ-ನಮ್ಮ ತುತ್ತಿನ ಗಣಿಮಗ್ಗದ ಎರಡಡಿ ಗಣಿಒಮ್ಮೆಲೆ ಬಿದ್ದು ಮಣ್ಣಾದ ಮನೆ…ಎಲ್ಲ ತಟಸ್ಥ ನಿಶಬ್ದ!ಕುಟುಂಬದ ಎಲ್ಲ ಕೈಕಾಲು ಕಚ್ಚಿತುಳಿದು ಮೆರೆದ ವಿದ್ಯುತ್ ತಂತಿ!ಎಲ್ಲಿ ಯಾವ ದೇವರ ಮೊರೆಜಠರದ ನಿಲ್ಲದ ಕೊರೆತದ ಕರೆಗೆ..ಹರಿದುಹೋದ ಬಟ್ಟೆಬಡ ಬದುಕುಕ್ಷಣ ಕ್ಷಣ ಚೂರುಚೂರಾಗಿ… ದಾರ ತುಂಡಾಗಿ ಲಾಳಿ ನಿಂತ ಕ್ಷಣಹರಿದ ದಾರಕ್ಕೆ ಮತ್ತೆ ಗಂಟುಅಥವಾ ಅಂಟು –ಮತ್ತೆ ಲಾಳಿ ಪಯಣ!ಅಂದು ಒಂದೊಮ್ಮೆ…ಈಗ-ನಾನೇ ನಿಂತು ಹೋದ ಘಳಿಗೆಎಲ್ಲಿ ಹುಡುಕುವುದು ಈ ಲಾಳಿಮುಲಾಮು ಕಷಾಯ ನನಗಾಗಿಎತ್ತಿ ಕೂರಿಸಲು ನನ್ನ ಮತ್ತೆಮಗ್ಗದೊಳಗೆನೂಲಿನಲಿ ಹಚ್ಚಲು ಬೆಳಕಿನ ಹೊನಲು…! ********************************** .

ಪವರ್ ಲೂಮ್…! Read Post »

ಇತರೆ, ಪ್ರಬಂಧ

ಬೀದಿಯ ಪ್ರಪಂಚ….

ಲಲಿತ ಪ್ರಬಂಧ ಬೀದಿಯ ಪ್ರಪಂಚ…. ಟಿ.ಎಸ್.ಶ್ರವಣಕುಮಾರಿ ಹಾದಿ ಬೀದಿಗಳಿಗೆ ತನ್ನದೇ ಒಂದು ಆಕರ್ಷಣೆಯಿದೆ. ಅದರದ್ದೇ ಒಂದು ಪ್ರಪಂಚ. ಎಂಥ ಅಳುತ್ತಿರುವ ಪುಟ್ಟ ಮಕ್ಕಳನ್ನೂ ಎತ್ತಿಕೊಂಡು ಬೀದಿಗೆ ಕರೆದುಕೊಂಡು ಬಂದರೆ ಕೆಲವೇ ಕ್ಷಣಗಳಲ್ಲಿ ಅವುಗಳ ಅಳು ಮಾಯ. ಅವುಗಳಿಗೆ ತೋರಿಸುವುದಕ್ಕೆ ಇಡಿಯ ಪ್ರಪಂಚವೇ ಅಲ್ಲಿದೆ. “ಪುಟ್ಟೂ ಅಲ್ನೋಡು ಕಾರು.. ಬಂತು ಬಂತು ಬಂತು…. ಈಗ ಸ್ಕೂಟರ್ ನೋಡೋಣ.. ಮಾಮಾ ಬಂದ್ಮೇಲೆ ಸ್ಕೂಟರ್‌ನಲ್ಲಿ ರೌಂಡ್ ಹೋಗ್ತೀಯಾ…  ಇದೇನಿದು..? ಸ್ಕೂಲು ವ್ಯಾನು.. ಮುಂದಿನ್ವರ್ಷದಿಂದ ನೀನೂ ಸ್ಕೂಲಿಗೆ ಹೋಗ್ತೀಯಾ ಅಣ್ಣಾ ತರ…. ಇಲ್ನೋಡು ಮರ.. ಅಬ್ಭಾ! ಎಷ್ಟೊಂದು ಹೂವು ನೋಡು… ಅಲ್ನೋಡು ಕಾಕಿ `ಕಾವ್ ಕಾವ್’ ಅದರ ಬಳಗಾನೆಲ್ಲಾ ಕರೀತಿದೆ. ಹೌದಾ.. ಹಾರಿಹೋಯ್ತಾ ಅದು. ಅಲ್ಲೇ ನೋಡ್ತಾ ಇರು ಈಗ ಗಿಣಿಮರಿ ಬರತ್ತೆ ಅಲ್ಲಿ… ನೋಡ್ದ್ಯಾ ನೋಡ್ದ್ಯಾ ಎಷ್ಟು ಚೆನ್ನಾಗಿದೆ ನೋಡು.. ಈಗ ನೋಡು ಅದರ ಫ್ರೆಂಡೂ ಬಂತು.. ಏನೋ ಮಾತಾಡ್ಕೊಂಡು ಒಟ್ಗೆ ಹಾರೋದ್ವು. ಇಲ್ನೋಡಿಲ್ನೋಡು ಪಕ್ಕದ್ಮನೆ ಮೀನಾ ಅಜ್ಜಿ ಒಣಗಿ ಹಾಕಿರೋ ಬೇಳೇನ ಎಷ್ಟೊಂದು ಗುಬ್ಬಿಗಳು ತಿಂತಾ ಇವೆ.” ಅಷ್ಟರಲ್ಲಿ ಎದುರಂಗಡಿಯ ಬದರಿ ಮಾಮ ಪುಟ್ಟೂನ ಕರೀತಾನೆ “ಬರ್ತೀಯಾ ನಮ್ಮಂಗಡೀಗೆ ಬಿಸ್ಕತ್ತು, ಚಾಕಲೇಟು ಎಲ್ಲಾ ಕೊಡ್ತೀನಿ.” “ಆಮೇಲ್ಬರ್ತೀನಿ” ಅನ್ನೂ ಮಾಮಂಗೆ… ಅಲ್ನೋಡು ತರಕಾರಿ ಗಾಡಿ ಬರ್ತಾ ಇದೆ. ಅಜ್ಜೀನ ಕೇಳ್ಕೊಂಡು ಬರೋಣ್ವಾ ಏನು ತರಕಾರಿ ಬೇಕೂಂತ” ….. ಹೀಗೆ ಮಾತಾಡಿಸ್ತಾ ಇದ್ರೆ ಟೈಂಪಾಸಾಗದೆ ಅಳ್ತಾ ಇದ್ದ ಮಗು ಬೇರೆ ಪ್ರಪಂಚಕ್ಕೇ ಹೋಗ್ಬುಡತ್ತಲ್ವಾ… ಮಗೂನೆ ಯಾಕೆ?!.. ನಮಗೂ ಮನೆಯ ಏಕತಾನತೆ ಬೇಸರ ಬಂದರೆ ಒಂದು ಸ್ವಲ್ಪ ಹೊತ್ತು ಮನೆಯ ಮುಂದೋ ಅಥವಾ ಬಾಲ್ಕನಿಯ ಕಿಟಕಿಯೆದುರೋ ಕೂತು ಹಾಗೇ ಬೀದಿಯ ಕಡೆ ನೋಡುತ್ತಿದ್ದರೆ ಎಷ್ಟು ವೈವಿಧ್ಯಮಯ ಪ್ರಪಂಚದಲ್ಲಿ ನಾವೂ ಕಳೆದುಹೋಗುತ್ತೇವೆ…. ಏಳುವಾಗಲೇ `ಸೊಪ್ಪೋ ಸೊಪ್ಪು’ ಎಂದು ಕೂಗಿಕೊಂಡು ಬರುವ ಮುದುಕನ ಕರೆಯಿಂದಲೇ ನನಗೆ ದಿನವೂ ಬೆಳಗಾಗುವುದು. ಬೆಳಗಿನ ಐದು ಗಂಟೆಗೆ ಮುಲ್ಲಾ `ಏಳಿ ಬೆಳಗಾಯಿತು’ ಎಂದು ಕರೆದಾಗ ಎಚ್ಚರಾದರೂ `ಸ್ವಲ್ಪ ಹೊತ್ತು ಬಿಟ್ಟು ಏಳೋಣ’ ಎಂದು ಮುದುರಿಕೊಂಡವಳನ್ನು ಆರೂವರೆಯಾಯಿತು ಇನ್ನಾದರೂ ಏಳು ಎಂದು ಎಬ್ಬಿಸುವುದು ಸೊಪ್ಪಿನವನ ಕರೆಯೇ. ಎದ್ದ ಐದು ಹತ್ತು ನಿಮಿಷಗಳಲ್ಲಿಯೇ `ಹಾಲು’ ಎಂದು ಕೂಗುತ್ತಾ ಹಾಲಿನ ಪ್ಯಾಕೆಟ್ಟನ್ನು ತಂದಿಡುವ ಬದರಿ. `ಹೂವು’ ಎಂದು ಹೂವಿನ ಸರವನ್ನು ಬಾಗಿಲಿಗೆ ಸಿಕ್ಕಿಸಿ ಹೋಗುವ ಹೂವಮ್ಮ. ಕಾಫಿಯ ಲೋಟ ಹಿಡಿದು ಬರುವ ವೇಳೆಗೆ ದಿನ ಪತ್ರಿಕೆ ಎಸೆದು ಹೋಗುವ ಹುಡುಗ…. ಎಲ್ಲರೂ ಹೊರಗಿನ ಜಗತ್ತಿನ ಸಂಪರ್ಕವಾಹಕರು. ಹೂವಿನ ಗಾಡಿಯ ಹಿಂದೆಯೇ ತೆಂಗಿನ ಕಾಯಿ ಮಾರುವವನು ಬರುತ್ತಾನೆ. ಎಂಟು ಗಂಟೆಗೆ ತರಕಾರಿ ಗಾಡಿಯವರ ಸಾಲು ಶುರುವಾಗುತ್ತದೆ. ಕೆಲವು ಗಾಡಿಗಳು ಒಂದೊಂದೇ ತರಕಾರಿಯದು, ಟೊಮೇಟೋ, ಈರುಳ್ಳಿ, ಅವರೆ ಕಾಯಿ’ ಇಂತವು. ಇನ್ನು ಕೆಲವು ಡಿಪಾರ್ಟ್-ಮೆಂಟಲ್ ಸ್ಟೋರಿನ ಹಾಗೆ ಶುಂಟಿ, ಮೆಣಸಿನಕಾಯಿ, ಕೊತ್ತಂಬರಿ ಸೊಪ್ಪಿನಿಂದ ಶುರುವಾಗಿ ಎಲ್ಲ ಬಗೆಯ ತರಕಾರಿಗಳನ್ನೂ ಕಣ್ಣಿಗಂದವಾಗುವ ಹಾಗೆ ಜೋಡಿಸಿಕೊಂಡು ಬಂದ ತರಕಾರಿ ಗಾಡಿಗಳು. ಮನೆಯೊಳಗೇ ಇದ್ದರೂ, ಅವರ ಧ್ವನಿಯ ಮೇಲೆ ಇಂತದೇ ಗಾಡಿ ಬಂದಿದೆಯೆಂದು ಅಂದಾಜಾಗುವಷ್ಟರ ಮಟ್ಟಿಗೆ ಅವರ ಧ್ವನಿ ಮೆದುಳಿನೊಳಗೆ ಮುದ್ರಿತವಾಗಿರುತ್ತದೆ. ಹೀಗೇ ದಿನಾ ಬೆಳಗ್ಗೆ ಏಳೂವರೆಗೆ `ರೋಜಾ ಹೂವು ಶ್ಯಾವಂತ್ಗೆ ಹೂವೂ..’ ಅಂತ ಗೊಗ್ಗರು ದನಿಯಲ್ಲಿ ಕೂಗಿಕೊಂಡು ಬರುತ್ತಿದ್ದ ಮುದುಕನ ಧ್ವನಿ ಮೂರ್ನಾಲ್ಕು ದಿನ ಕೇಳದೇ ಏನೋ ಕೊರೆಯಾದಂತೆನಿಸುತ್ತಿತ್ತು. ನಂತರ ಅವನು ಮುಂದಿನ ಬೀದಿಯಲ್ಲಿ ಗಾಡಿ ತಳ್ಳಿಕೊಂಡು ಹೋಗುವಾಗ ಸೇವಾಕ್ಷೇತ್ರ ಆಸ್ಪತ್ರೆಯ ಬಳಿ ಹೃದಯಾಘಾತವಾಗಿ ದಾರಿಯಲ್ಲೇ ಸತ್ತಿದ್ದ ಸುದ್ದಿ ಕೇಳಿದಾಗ ಬಂದುಗಳೊಬ್ಬರನ್ನು ಕಳೆದುಕೊಂಡ ಭಾವ ಬಹಳದಿನಗಳು ಆ ಹೊತ್ತಿಗೆ ಕಾಡುತ್ತಿತ್ತು. ಹನ್ನೊಂದು ಗಂಟೆಯ ವೇಳೆಗೆ ಬರುವ ಎಳನೀರು ಮಾರುವವನು, ಹಣ್ಣಿನ ಬುಟ್ಟಿ ಹೊತ್ತು ಬರುವವನು “ಪಕ್ಕದವ್ರಿಗೆ ಹೇಳ್ಬೇಡಿ. ನಿಮಗಂದ್ರೆ ಎರಡು ರೂಪಾಯಿ ಕಮ್ಮಿಗೇ ಕೊಡ್ತಿದೀನಿ” ಎಂದು ಎಲ್ಲರ ಮನೆಯಲ್ಲೂ ಹಾಗೆ ಹೇಳಿಯೇ ವ್ಯಾಪಾರ ಮಾಡಿದ್ದರೂ, ಅವನು ಹೇಳಿದ್ದು ನಮಗಷ್ಟೇ ನಿಜವೆಂದು ಆ ಕ್ಷಣಕ್ಕಾದರೂ ನಂಬುವಂತಾಗುತ್ತದೆ. ಮಧ್ಯಾನ್ಹದ ವೇಳೆ ಬರುವ ಪೈನಾಪಲ್, ಸೌತೆಕಾಯಿ, ಇಂತವನ್ನು ಹೆಚ್ಚಿಕೊಡುವ ಗಾಡಿಗಳು, ಅಲಂಕಾರಿಕ ಸಸ್ಯಗಳು ಮತ್ತು ಹೂಕುಂಡಗಳನ್ನಿಟ್ಟುಕೊಂಡು ಬರುವ ಕೈಗಾಡಿಗಳು, ಸಾಯಂಕಾಲ ನಾಲ್ಕು ಗಂಟೆಯಿಂದ ಶುರುವಾಗುವ ಮಲ್ಲಿಗೆ ಮೊಗ್ಗು, ಕಳ್ಳೇ ಪುರಿ, ಚುರುಮುರಿ-ಪಾನೀಪೂರಿ ಗಾಡಿ, ಠಣಾ ಠಣಾ ಎಂದು ಸದ್ದು ಮಾಡುತ್ತಾ ಕಡಲೇಕಾಯನ್ನು ಹುರಿಯುವವನ ಗಾಡಿ ಎಲ್ಲರೂ ರಂಗಸ್ಥಳದ ಮೇಲಿನ ತಮ್ಮ ಪಾತ್ರವನ್ನು ಚೊಕ್ಕವಾಗಿ ನಿರ್ವಹಿಸುವವರಂತೆ ಆಯಾಕಾಲಕ್ಕೆ ಬಂದು ಹೋಗುತ್ತಿರುತ್ತಾರೆ. ಇವರೆಲ್ಲಾ ನಿಯತಕಾಲಿಕರಂತಿದ್ದರೆ ಸೋಫಾ ರಿಪೇರಿ, ಛತ್ರಿ, ಪಾದರಕ್ಷೆ ರಿಪೇರಿಯವರು, ಚಾಕು, ಈಳಿಗೆಗಳನ್ನು ಚೂಪು ಮಾಡುವವರು, ಚಾಪೆ, ನೆಲವಾಸು, ಮತ್ತು ಕಾರ್ಪೆಟ್ಟುಗಳನ್ನು ಮಾರುವವರು, ಪ್ಲಾಸ್ಟಿಕ್, ಅಲ್ಯುಮಿನಿಯಂ, ಮತ್ತು ಸ್ಟೀಲ್ ಪಾತ್ರೆ ಮಾರಾಟಗಾರರು, ಕಡೆಗೆ ರಂಗೋಲಿ, ಪೊರಕೆ, ಮಕ್ಕಳ ಬಟ್ಟೆಗಳು, ಆಟಿಕೆಗಳು, ಪೆಟ್ಟಿಕೋಟು ಇತ್ಯಾದಿಗಳನ್ನು ಮಾರುವವರು ಅತಿಥಿ ನಟರಂತೆ ಆಗೀಗ ಬಂದು ತಮ್ಮ ದರ್ಶನ ಭಾಗ್ಯವನ್ನು ಇತ್ತು ಹೋಗುತ್ತಿರುತ್ತಾರೆ. ಇದಷ್ಟೇ ಬೀದಿ ಪ್ರಪಂಚವೇ? ಖಂಡಿತಾ ಅಲ್ಲ. ಈಗ ಅಂಚೆಯಣ್ಣ ಇಲ್ಲ ಬಿಡಿ; ಅವನಾದರೆ ಒಂದು ನಿಗದಿತ ಸಮಯದಲ್ಲಾದರೂ ಬರುತ್ತಿದ್ದ. ಈಗ ಅವನ ಬದಲಿಗೆ ಕೊರಿಯರ್ ಹುಡುಗರು ಹೊತ್ತು ಗೊತ್ತಿಲ್ಲದೆ ಬಾಗಿಲು ತಟ್ಟುತ್ತಾರೆ. ಮೊದಲಿಗೆ ದಿನವೂ ಬರುತ್ತಿದ್ದ ಅಂಚೆಯಣ್ಣ ಮನೆಯವರೆಲ್ಲರಿಗೆ ಪರಿಚಿತನಾಗಿರುತ್ತಿದ್ದ. ಎಷ್ಟೋ ಹಳ್ಳಿಗಳಲ್ಲಿ, ಸಣ್ಣ ಪುಟ್ಟ ಊರುಗಳಲ್ಲಿ ಸಂದೇಶವಾಹಕನಾಗಿಯೂ ಇರುತ್ತಿದ್ದ. ಓದು ಬಾರದವರಿಗೆ ಪತ್ರದಲ್ಲಿದ್ದುದನ್ನು ಓದಿ ಹೇಳುತ್ತಿದ್ದ. ಬಿಸಿಲು ಹೊತ್ತಿನಲ್ಲಿ ಬಂದವನಿಗೆ ಒಂದು ಲೋಟ ಪಾನಕವೋ, ಮಜ್ಜಿಗೆಯೋ ಕೊಡುವ ಪರಿಪಾಠವೂ ಕೆಲವು ಮನೆಗಳಲ್ಲಿರುತ್ತಿತ್ತು. ಬಂಧುವಲ್ಲದಿದ್ದರೂ ಆತ ಮಿತ್ರರ ಗುಂಪಿನಲ್ಲಿ ಸೇರಿ ಹೋಗುತ್ತಿದ್ದ. ಈಗಲಾದರೋ ದಿನಕ್ಕೊಬ್ಬ ಕೊರಿಯರ್ ಹುಡುಗರು. ಯಾರು ನಿಜವಾದವರೋ, ಯಾರು ಮೋಸಗಾರರೋ ಒಂದೂ ಅರಿವಾಗದೆ ಅವರನ್ನು ಬಾಗಿಲ ಹೊರಗೇ ನಿಲ್ಲಿಸಿ ಗ್ರಿಲ್ ಬಾಗಿಲಿನ ಕಿಂಡಿಯಿಂದಲೇ ಮಾತಾಡಿಸಿ ಲಕೋಟೆಯಾದರೆ ಅಲ್ಲಿಂದಲೇ ತೆಗೆದುಕೊಂಡು, ಪಾರ್ಸೆಲ್ ಆದರೆ, ಅದರ ಹಿಂದು ಮುಂದನ್ನೆಲ್ಲಾ ವಿಚಾರಿಸಿಕೊಂಡು ನಂತರ ಬಾಗಿಲನ್ನು ಸ್ವಲ್ಪವೇ ತೆರೆದು ಡಬ್ಬಿಯನ್ನು ತೆಗೆದುಕೊಂಡ ತಕ್ಷಣ ಮತ್ತೆ ಬಾಗಿಲು ಮುಚ್ಚುವುದು ಸಹಜವೇ ಆಗಿದೆ. ಇನ್ನು ಮನೆ ಬಾಗಿಲು ತಟ್ಟುವ ಮಾರಾಟಗಾರರದಂತೂ ಇನ್ನೊಂದು ಉಪಟಳ. ಪುಸ್ತಕ, ದಿನೋಪಯೋಗಿ ವಸ್ತುಗಳಿಂದ ಹಿಡಿದು ಮಕ್ಕಳ ಡೈಪರ್ ವರೆಗೆ ಎಲ್ಲವನ್ನೂ ಮನೆಬಾಗಿಲಿಗೆ ತರುತ್ತಾರೆ. ನಕಲಿಯೆಷ್ಟೋ, ಅಸಲಿಯೆಷ್ಟೋ ದೇವನೇ ಬಲ್ಲ! ಬೀದಿಯ ಮೇಲೆ ಬರುವ ಮೆರವಣಿಗೆ, ದೇವರ ಉತ್ಸವಗಳೆಂದರೆ ಮಕ್ಕಳಾದಿಯಾಗಿ ದೊಡ್ಡವರವರೆಗೂ ಎಲ್ಲರಿಗೂ ಆಕರ್ಷಣೆ. ಅಂತಹ ಸದ್ದು ಕಿವಿಗೆ ಬಿದ್ದಿತೆಂದರೆ ಸಾಕು… ಮನೆಯಲ್ಲಿರುವವರೆಲ್ಲರೂ ಬೀದಿಯ ಕಡೆಗೇ… ನಾನು ಎಳೆಯದರಲ್ಲಿ ನೋಡುತ್ತಿದ್ದ ಮಾರ್ಗಶಿರ ಮಾಸದ ಬೆಳಗಿನ ಝಾವದಲ್ಲಿ ತಾಳ ತಟ್ಟಿಕೊಂಡು ತನ್ನದೇ ಒಂದು ಅಲೌಕಿಕ ಛಾಪನ್ನು ನಿರ್ಮಿಸಿಕೊಂಡು ಬರುತ್ತಿದ್ದ ದತ್ತ ಜಯಂತಿಯ ಭಜನೆ, ರಥಸಪ್ತಮಿಯಲ್ಲಿ ಸುಶ್ರಾವ್ಯ ವಾಲಗದೊಂದಿಗೆ ಬರುತ್ತಿದ್ದ ತೇರು, ಆಡಿ ಕೃತ್ತಿಕೆಯ ದಿನದಂದು ಗುಡ್ಡೇಕಲ್ಲಿನ ಸುಬ್ರಹ್ಮಣ್ಯೇಶ್ವರನ ದೇವಸ್ಥಾನಕ್ಕೆ `ಹರೋಹರ’ ಎಂದು ಕೂಗುತ್ತಾ ಬೇವಿನ ಮತ್ತು ಅರಿಶಿನ ಬಣ್ಣದ ಉಡುಗೆಯುಟ್ಟು ಕಾವಡಿ ಎತ್ತಿಕೊಂಡು ಹೋಗುತ್ತಿದ್ದ, ಕೆಲವರು ಭೀಕರವಾಗಿ ಕೆನ್ನೆಯನ್ನೂ, ನಾಲಗೆಯನ್ನೂ ಕಂಬಿಯಿಂದ ಚುಚ್ಚಿಕೊಂಡು, ಮತ್ತೆ ಕೆಲವರು ಬೆನ್ನಿಗೆ ಕೊಕ್ಕೆಯನ್ನು ಸಿಕ್ಕಿಸಿಕೊಂಡು ಎಳೆದುಕೊಂಡು ಹೋಗುತ್ತಾ ನಮ್ಮ ಮನದಲ್ಲಿ ಭಕ್ತಿಯೊಂದಿಗೆ ಭಯವನ್ನೂ ಹುಟ್ಟಿಸುತ್ತಿದ್ದ ಭಕ್ತರ ಗುಂಪು… ವಿಜಯ ದಶಮಿಯ ದಿನ ಊರಿನ ಎಲ್ಲ ದೇವರೂ ಬನ್ನಿ ಕಡಿಯುತ್ತಿದ್ದ ನೆಹರೂ ಮೈದಾನಕ್ಕೆ ಮೆರವಣಿಗೆ ಹೋಗುತ್ತಿದ್ದ ದೃಶ್ಯ…  ಎಲ್ಲವೂ ನನ್ನ ನೆನಪಿನ ಕೋಶದಲ್ಲಿ ಭದ್ರವಾಗಿ ಬೇರುಬಿಟ್ಟು ಕುಳಿತುಬಿಟ್ಟಿವೆ. ಹೀಗೇ ಒಂದು ಆಡಿ ಕೃತ್ತಿಕೆಯ ದಿನ ನಾವೆಲ್ಲರೂ ಕಾವಡಿಯ ಮೆರವಣಿಗೆಯನ್ನು ನೋಡಲು ಬೀದಿಗೆ ಬಂದು ನಿಂತಿದ್ದೆವು. ನಮ್ಮ ಮನೆಯ ಕೆಲಸದಾಕೆ ಮುನಿಯಮ್ಮನೂ ನಮ್ಮ ಜೊತೆಗೇ ನಿಂತಿದ್ದವಳಿಗೆ ಅದೇನಾಯಿತೋ ಇದ್ದಕ್ಕಿದ್ದಂತೆ ಅರೆಗಣ್ಣಿನಲ್ಲಿ ಎರಡೂ ಕೈಗಳನ್ನು ತಲೆಯಮೇಲೆ ಜೋಡಿಸಿ ಮುಗಿದುಕೊಂಡು ಮೆರವಣಿಗೆಯ ಹಿಂದೆಯೇ ಓಡಿಹೋದಳು. ನಾವೆಲ್ಲರೂ `ಮುನಿಯಮ್ಮಾ ಮುನಿಯಮ್ಮಾ’ ಎಂದು ಜೋರಾಗಿ ಕರೆಯುತ್ತಲೇ ಇದ್ದೇವೆ; ಅವಳಿಗೆ ಕೇಳಿಸಿದ್ದರೆ ತಾನೆ! ಸ್ವಲ್ಪ ಹೊತ್ತು ಕಾದು ನಿಂತಿದ್ದು ನಾವೆಲ್ಲಾ ಮನೆಯೊಳಗೆ ಬಂದವು. ಅದೆಷ್ಟು ದೂರ ಹೋಗಿದ್ದಳೋ… ಒಂದು ಗಂಟೆಯ ನಂತರ ಅವಳೂ ವಾಪಸ್ಸು ಬಂದಳು. ಬಹಳ ಆಯಾಸಗೊಂಡಿದ್ದಳು. ಅಮ್ಮನಿಗೆ ಅವಳು ಸಾಕ್ಷಾತ್ ಸುಬ್ರಹ್ಮಣ್ಯೇಶ್ವರನೇ ಅನ್ನಿಸಿಬಿಟ್ಟಿತೋ ಏನೋ..  ಅವಳನ್ನು ಕೂರಿಸಿ ಒಂದು ಲೋಟ ತಣ್ಣಗೆ ಪಾನಕ ಮಾಡಿಕೊಟ್ಟು “ಸುಸ್ತಾಗಿದ್ದರೆ ಮನೆಗೆ ಹೋಗಿ ಮಲಗಿಕೋ. ನಾಳೆ ಬಂದು ಬಟ್ಟೆ ಒಗೆಯುವೆಯಂತೆ” ಎಂದರು. ಸ್ವಲ್ಪ ಹೊತ್ತು ಕೂತಿದ್ದವಳು ಮುನಿಯಮ್ಮನಾಗೇ `ಈಗ ಸರಿಹೋಯ್ತು’ ಎನ್ನುತ್ತಾ ತನ್ನ ಕೆಲಸಕ್ಕೆ ಎದ್ದಳು. ನಮಗೆಲ್ಲಾ ಭಕ್ತಿಯ ಈ ಮುಖದ ದರ್ಶನವಾಗಿತ್ತು! ಈಗ ಬೆಂಗಳೂರಿನಲ್ಲಿ ನಾವಿರುವ ರಸ್ತೆಯ ಒಂದು ಅಡ್ಡರಸ್ತೆಯಲ್ಲಿ ಗಂಗಮ್ಮನ ಗುಡಿಯಿದೆ. ಅದರ ಮುಂದಿನ ರಸ್ತೆಯಲ್ಲಿ ಮಸೀದಿಯಿದೆ. ಅಣ್ಣಮ್ಮ ದೇವಿಯ ಭಕ್ತಮಂಡಳಿ ನಮ್ಮ ಮನೆಯ ಪಕ್ಕಕ್ಕೇ ಇದೆ. ಮನೆಯ ಹಿಂಬಾಗದಲ್ಲಿ ವೆಂಕಟರಮಣನ ದೇವಸ್ಥಾನವಿದೆ. ಹಾಗಾಗಿ ಆಗಾಗ ಎಷ್ಟೆಲ್ಲಾ ಮೆರವಣಿಗೆಗಳನ್ನು ನೋಡುವ ಭಾಗ್ಯ ನಮ್ಮದಾಗಿದೆ. ಗಂಗಮ್ಮನ ಹೂವಿನ ಕರಗ, ರಥೋತ್ಸವ, ವೆಂಕಟರಮಣನ ಕಡೆಯ ಶ್ರಾವಣ ಶನಿವಾರದ ಉತ್ಸವ, ಮುಸ್ಲಿಮರ ಹಬ್ಬಗಳ ಹಲವು ಬಗೆಯ ಉತ್ಸವಗಳು, ಮೆರವಣಿಗೆಗಳು, ವರ್ಷಕ್ಕೊಮ್ಮೆ ಚೈತ್ರಮಾಸದಲ್ಲೋ, ವೈಶಾಖ ಮಾಸದಲ್ಲೋ ನಮ್ಮ ಮನೆಯ ಪಕ್ಕದಲ್ಲೇ ಮೂರು ದಿನ ಠಿಕಾಣಿ ಹಾಕುವ ಅಣ್ಣಮ್ಮ.. ಶುಕ್ರವಾರ ಆಕೆ ಬರುವುದು. ಅದಕ್ಕೆ ಪೂರ್ವಭಾವಿಯಾಗಿ ಆ ಸೋಮವಾರದಿಂದಲೇ ಇಡೀ ಬೀದಿ ಅಲಂಕರಿಸಿಕೊಂಡು ನಿಂತಿರುತ್ತದೆ. ಬೀದಿಯ ಮುಂಬಾಗದಲ್ಲಿ ವಿದ್ಯುದ್ದೀಪಗಳಲ್ಲಿ ಅಣ್ಣಮ್ಮನ ದೊಡ್ಡ ಚಿತ್ರ, ಬೀದಿಯುದ್ದಕ್ಕೂ ತೋರಣದಂತೆ ಬಣ್ಣ ಬಣ್ಣದ ವಿದ್ಯದ್ದೀಪಗಳು, ಮಾವು ಬೇವಿನ ತೋರಣಗಳು, ಬಾಳೆಯ ಕಂಬದ ಅಲಂಕರಣ, ಇನ್ನು ದೇವಿಯನ್ನು ಕೂರಿಸುವ ವೇದಿಕೆಯಂತೂ ಗುರುವಾರದಿಂದಲೇ ವೈಭವವಾಗಿ ಸಿದ್ಧವಾಗಿರುತ್ತದೆ. ಅಣ್ಣಮ್ಮ ಬೀದಿಯ ಕೊನೆಯಲ್ಲಿರುವಾಗಲೇ ಅವಳನ್ನು ಎದುರುಗೊಳ್ಳಲು ನಮ್ಮ ಪಕ್ಕದ ಅಡ್ಡರಸ್ತೆಯಲ್ಲಿರುವ ಗಂಗಮ್ಮದೇವಿಯ ಉತ್ಸವಮೂರ್ತಿ ಗೆಳತಿಯನ್ನು ಕರೆದುಕೊಂಡು ಬರಲು ಹೊರಡುತ್ತದೆ. ಇಬ್ಬರೂ ಒಟ್ಟಿಗೆ ಅಲ್ಲಿಂದ ಬರುತ್ತಾರೆ. ದೇವಿಯರ ಮುಂದೆ ಪೂರ್ಣಕುಂಭ ಹೊತ್ತ ಸಿಂಗಾರಗೊಂಡ ಮಹಿಳೆಯರು, ಬಾಜಾ ಬಜಂತ್ರಿ, ಆರತಿಗಳು, ಕಿವಿ ಗಡಚಿಕ್ಕುವ ಅಣ್ಣಮ್ಮನ ಭಕ್ತಿಯ ಹಾಡುಗಳು.. ಅದೇನು ಸಂಭ್ರಮ… ಮೂರುದಿನಗಳೂ ಮನೆಯ ಮುಂದೆ ಹಬ್ಬವಿದ್ದಂತೆ. ಮಾರನೆಯ ದಿನ ಅಣ್ಣಮ್ಮ ದೇವಿ ಇಲ್ಲಿನ ಆಸುಪಾಸಿನ ಬೀದಿಯಲ್ಲಿರುವ ಅರವತ್ತು ಎಪ್ಪತ್ತು ಮನೆಗಳಿಗೆ ವರ್ಷಕ್ಕೊಮ್ಮೆ ಬರುವ ಮಗಳಂತೆ ಹೋಗಿ ಪೂಜೆ ಮಾಡಿಸಿಕೊಂಡು ಉಡಿತುಂಬಿಸಿಕೊಂಡು ಬರುತ್ತಾಳೆ. ಅಂದು ಸಂಜೆ ದೇವಿಯ ಎದುರಿಗೆ ಮೂರು ಬೀದಿ ಕೂಡುವಲ್ಲಿ ಒಂದು ಸ್ಟೇಜನ್ನು ಹಾಕಿ ನಾಟಕವೋ, ಆರ್ಕೆಸ್ಟ್ರಾನೋ ಏನಾದರೊಂದು ನಡೆಯುತ್ತಿರುತ್ತದೆ. ನಮ್ಮ ಮನೆಯ ಕಾರ್ ಗ್ಯಾರೇಜೇ ಅವರಿಗೆ ಗ್ರೀನ್ ರೂಮು. ಪಕ್ಕದ ಬೀದಿಗಳಲ್ಲಿರುವ ಮುಸಲ್ಮಾನ್ ಬಂಧುಗಳೂ ಹೆಂಗಸರು, ಮಕ್ಕಳಾದಿಯಾಗಿ ಇದರಲ್ಲಿ ಮತ್ತು ಮಾರನೆಯ ದಿನ ನಡೆಯುವ ರಾಗಿ ಅಂಬಲಿ ಮತ್ತು ಅನ್ನ ಸಂತರ್ಪಣೆಗಳಲ್ಲಿ ಪಾಲುಗೊಳ್ಳುತ್ತಾರೆ. ಎಲ್ಲರನ್ನೂ ಒಂದುಗೂಡಿಸಿ ಸಂತೋಷ ಪಡಿಸುತ್ತಾ ಪರಸ್ಪರ ಬಾಂಧವ್ಯ ವೃದ್ಧಿಸುವುದರಲ್ಲಿ ಬೀದಿಯ ಪಾತ್ರವೇನು ಕಮ್ಮಿಯೇ?! ಬೀದಿ ಜಗಳಗಳ ಮಹಾತ್ಮೆ ಅತ್ಯಂತ ಪುರಾತನವಾದದ್ದು. ಬೀದಿ ಬದಿಯಲ್ಲಿ ನೀರಿಗಾಗಿ ಕಾದಾಡುವುದು; ಅಕ್ಕಪಕ್ಕದವರ ಜಗಳ ಬೀದಿಗೆ ಬರುವುದು ಇವೆಲ್ಲಾ ಬಹಳ ಸಹಜವಾದ ಕ್ರಿಯೆಗಳು. ಇಬ್ಬರೂ ಅಮ್ಮ, ಅಪ್ಪ, ಅಜ್ಜಿ, ತಾತ ಎಲ್ಲರ ಜಾಯಮಾನವನ್ನೂ ನೀವಾಳಿಸುತ್ತಾ ಕೂಗಾಡುತ್ತಿದ್ದರೆ, ಅಲ್ಲಿಯವರೆಗೆ ಗೆಳೆಯರಾಗಿದ್ದ ಅವರಿಬ್ಬರ ಮನೆಯ ನಾಯಿಗಳೂ ತಮ್ಮ ಮಾಲೀಕರನ್ನು ಅನುಕರಿಸಿ `ಭೌ…ವೌ…’ ಎಂದು ಹಿಮ್ಮೇಳ ನೀಡುತ್ತಿದ್ದರೆ ಒಂದಷ್ಟು ಕಾಲ ಜನರೆಲ್ಲಾ ಮನರಂಜನೆಯನ್ನು ತೆಗೆದುಕೊಂಡು ನಂತರ ಯಾರೋ ಒಬ್ಬರು ಹಿರಿಯರು ಇಬ್ಬರ ಮಧ್ಯ ನಿಂತು ಇಬ್ಬರಿಗೂ ಸಮಾಧಾನ

ಬೀದಿಯ ಪ್ರಪಂಚ…. Read Post »

ಇತರೆ, ವರ್ತಮಾನ

ಸಮಾಜ ಕಟ್ಟುವಲ್ಲಿ ಸಾಹಿತ್ಯದ ಪಾತ್ರ

ಲೇಖನ ಸಮಾಜ ಕಟ್ಟುವಲ್ಲಿ ಸಾಹಿತ್ಯದ ಪಾತ್ರ ಶಿವರಾಜ್ ಮೋತಿ ಸಮಾಜವೆಂದರೆ ಜನ,ಗುಂಪು ಎಂದರ್ಥವಾಗುತ್ತದೆ. ವಿಧವಿಧವಾದ ಜನ,ಅನೇಕ ಗುಂಪುಗಳು ಇರುತ್ತವೆ. ಆದರೆ ಇಂದಿನ ಸಮಾಜ ಮೂಲಭೂತವಾದಿ,ಡೊಂಗಿ ರಾಜಕಾರಣಿಗಳ ಕೈಗೆ ಸಿಕ್ಕು ವಿಲ-ವಿಲವಾಗಿ ಬಿದ್ದು ನರಳಾಡುತ್ತಿದೆ. ಸಮಾಜದಲ್ಲಿದ್ದ ನೂನ್ಯತೆಗಳನ್ನು ಸರಿಪಡಿಸಲು,ಸಮ ಸಮಾಜದ ಕನಸನ್ನು ಕಟ್ಟಲು ಹಲವಾರು ಮಾರ್ಗಗಳಿವೆ. ಅದರಲ್ಲೂ ವಿಶೇಷವಾಗಿ ಸಾಹಿತ್ಯವೂ ಒಂದು.ಸಾಹಿತ್ಯದಲ್ಲಿ ಹಲವಾರು ಪ್ರಕಾರಗಳು ಜನಪದ, ಜಾನಪದ,ಪುರಾಣ,ನಾಟಕ,ಕಲೆ, ಸಂಗೀತ ಮುಂತಾದವೆಲ್ಲವೂ ಒಂದಕ್ಕೊಂದು ಸಂಬಂಧವಿದ್ದೆ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಕಟ್ಟಲು ಅನೇಕ ಮಹನೀಯರು,ಶ್ರಮಿಸಿದ್ದಾರೆ,ಶ್ರಮಿಸುತ್ತಿದ್ದಾರೆ ಕೂಡ ಹೌದು.ಸಾಹಿತ್ಯವು ಒಡೆದ ಮನಸ್ಸುಗಳನ್ನು ಕೂಡಿಸಬೇಕೇ ವಿನಹ ಛಿದ್ರ-ಛಿದ್ರ ಮಾಡಬಾರದು. ಜಾತಿ ಅಸ್ಪೃಶ್ಯತೆಯ ತೆಕ್ಕೆಗೆ ಸಿಲುಕಿ ನರಳಾಡಿದ ಜನಕ್ಕೆ,ಧ್ವನಿಯಿಲ್ಲದ ಸಮುದಾಯಕ್ಕೆ ಧ್ವನಿಯಾಗಲು,ತಬ್ಬಲಿಗಳ ಪರ, ಅಲೆಮಾರಿ, ಆದಿವಾಸಿ,ಬುಡಕಟ್ಟು ಜನರಿಗಾಗಿ ಹೋರಾಡಲು, ಶೋಷಣೆಗೆ ಒಳಪಟ್ಟವರನ್ನು ಕಿಚ್ಚೆಬ್ಬಿಸಿ,ಅವರಿಗಾಗುವ ಅನ್ಯಾಯದ ವಿರುದ್ಧ ಸಿಡಿದೇಳಲು ಎಬ್ಬಿಸಿ,ಅವರ ಜೊತೆಗೂಡಲು ಸಾಹಿತ್ಯದ ಮೂಲಕ ಸಾಧ್ಯ.ಇಂತಹ ಕೆಲಸ ಮಾಡುತ್ತಿರುವ ದೊಡ್ಡ ದೊಡ್ಡ ಕೆಲವೇ ಸಾಹಿತಿಗಳನ್ನೂ ಹಾಗೂ ಪ್ರಚಾರ ಪಡೆಯದೇ ಮಾಡುತ್ತಿರುವ ಸಣ್ಣ-ಸಣ್ಣ ಸಾಹಿತಿಗಳನ್ನನ್ನೂ, ಹೋರಾಟಗಾರರನ್ನು ನಾವು ಇಂದು ನೋಡಬಹುದು.. ಇನ್ನೂ ಕೆಲ ಸಾಹಿತಿಗಳಿದ್ದಾರೆ,ಹೆಣ್ಣು ಸಬಲೆಯಲ್ಲ, ಅಬಲೆಯೆನ್ನುವ ಹೆಣ್ಣನ್ನು ಶೋಷಿಸುವ ಕೀಳು ಮನಸ್ಥಿತಿಗಳು,ಶೋಷಿತರನ್ನು ಶೋಷಿತರನ್ನಾಗೆ ನೋಡಬಯಸುವ,ಜಾತಿಧರ್ಮಗಳ ನಡುವೆ ಜಗಳ ಹಚ್ಚುವ ಸಾಹಿತ್ಯ ಸೃಷ್ಟಿ ಮಾಡುವುದು, ಅನ್ಯಧರ್ಮೀಯರನ್ನು ಅನುಮಾನಸ್ಥವಾಗಿ ನೋಡುವ, ಇಲ್ಲ-ಸಲ್ಲದ ಇತಿಹಾಸ ಸೃಷ್ಟಿ ಮಾಡುವುದು, ಅದು ನಿಜವಾದರೂ ಇಂದಿನ ಪರಿಸ್ಥಿತಿಗೆ ಒಗ್ಗೂಡಿಸಿಕೊಂಡು ಬದಲಾವಣೆಯನ್ನು ತರಬಯಸದೇ, ಕೋಮುಸೌಹಾರ್ದತೆಯನ್ನು ಕಾಪಾಡಿಕೊಳ್ಳದೆ ಶಾಂತಿಗೆಡುವ ಕೆಲಸವೂ ನಡೆದಿದೆ.ಅದೂ ನಿಲ್ಲಲ್ಲಿ.. ಇಂದಿನ ಉದಯೋನ್ಮುಖ ಸಾಹಿತಿಗಳು,ಕವಿಗಳು ಅವನು,ಅವಳು ಎನ್ನದೇ ಅರ್ಥಾತ್ ಪ್ರೀತಿ-ಪ್ರೇಮದ ಬಗ್ಗೆ ಬರೆಯುವುದು ಅದರಲ್ಲೂ ಭಗ್ನಪ್ರೇಮಿಯಂತೆ ಕಲ್ಪಿಸಿ ಬರೆಯುವುದು ನೋಡಿದರೆ,ಇವರಿಗೆ ಅನ್ಯ ವಿಷಯಗಳೇ ಇಲ್ಲವೇ ಎನ್ನಿಸದೇ ಇರದು.ಆದರೂ ಇವರು ಅನ್ಯವಿಷಯಗಳು ನನಗ್ಯಾಕೆ,ನಾನು ಬರೆದರೆ ಏನಾದರೂ ಬದಲಾದಿತೇ ಎಂದು ಕೀಳು ಮನಸ್ಥಿತಿಯಿಂದಲೇ ಇದಾರೆ ವಿನಹ ದೊಡ್ಡತನದಿಂದಲ್ಲ. ಸಮಾಜದಲ್ಲಿ ಅನ್ಯಾಯವಾಗುತ್ತಿದ್ದರೂ ದೈಹಿಕವಾಗಿ ಎದುರಿಸದೇ ಆಗದಿರಬಹುದು,ಕಣ್ಣುಮುಂದೆ ಅನ್ಯಾಯ ನಡೆಯದೇ, ನಡೆದೂ ಇರಬಹುದು, ದೂರದೆಲ್ಲೋ ಅನ್ಯಾಯ ನಡೆದಿರಬಹುದು ನಮಗ್ಯಾಕೆನ್ನದೇ ಅದನ್ನು ಪ್ರತ್ಯಕ್ಷವಾಗಿ ವಿರೋಧಿಸದಾಗದಿದ್ರೂ ಸಾಹಿತ್ಯದ ಮೂಲಕ ವಿರೋಧಿಸುವುದು, ಪ್ರತಿರೋಧಿಸಬೇಕೇ ವಿನಹ ಮಂಕಾಗಿ ಕುರುಡಾಗುವುದಲ್ಲ,ಅನ್ಯಾಯವನ್ನು ವಿರೋಧಿಸುವ ಕೆಲಸವಾಗಬೇಕಿದೆ. ಪರಿಸರದ ಹಾನಿಯನ್ನು ತಡೆಗಟ್ಟಲು, ಪರಿಸರಾತ್ಮಕ, ಪ್ರಾಣಿ-ಪಕ್ಷಿಗಳ ರಕ್ಷಣೆ,ಅತ್ಯಾಚಾರದ ವಿರುದ್ಧ, ಜೀವವಿರೋಧಿ, ಮಹಿಳಾ ವಿರೋಧಿ,ಮಾನವ ವಿರೋಧಿ ಮುಂತಾದವುಗಳ ಕೆಲಸ ಸಾಹಿತಿಗಳಿಂದ ತಡೆಗಟ್ಟಲು ಆಗುತ್ತಿಲ್ಲ.ನಮ್ಮ ದೇಶ ಮಹಾನ್ ಧೀಮಂತ ಪುರುಷ-ಮಹಿಳೆ ಸಾಧಕ ಮಹಾತ್ಮರನ್ನು ನೀಡಿದೆ.ಅವರು ಸಮಾಜ ಕಟ್ಟಿದ ಪರಿಯನ್ನು ನಾವು ಅಳವಡಿಸಿಕೊಂಡು ಸಾಗಬೇಕಾಗಿದೆ.ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜವನ್ನು ಕಟ್ಟಲು ಸಾಹಿತ್ಯದ ಮೂಲಕ ಕೆಲಸಗಳು ಆಗುತ್ತಿಲ್ಲ,ಆಗಬೇಕಾಗಿದೆ. ಸರ್ಕಾರದ ನಡೆನುಡಿಗಳು,ಕಾಯ್ದೆಗಳು ಎಲ್ಲ ಕಾಲಕ್ಕೂ ಪ್ರಜಾಸತ್ತಾತ್ಮಕವಾಗಿ,ಪ್ರಜೆಗಳ ಹಿತರಕ್ಷಣೆಗಾಗಿಯೇ ಇರುತ್ತವೆ ಎಂದು ಹೇಳಲಾಗದು,ಕೆಲವೊಮ್ಮೆ ಸರಕಾರಗಳು ಗೊತ್ತಿದ್ದೂ,ಗೊತ್ತಿಲ್ಲದೆಯೂ ಪ್ರಜೆಗಳ ವಿರೋಧಿ ಕಾಯ್ದೆಯೂ ತರಬಹುದು.ಅವಾಗ ಸಾಹಿತಿಗಳಾದವರು ಖಡಾಖಂಡಿತವಾಗಿ ವಿರೋಧಿಸಬೇಕು. ರಾಜಕೀಯದ ಬಗ್ಗೆ ಬೇಡವೆಂದು ತಮ್ಮ ಅಭಿಪ್ರಾಯವನ್ನು ದಾಖಲಿಸದೇ ಹೋದರೆ ಎಲ್ಲ ಕಾಲಕ್ಕೂ ಬಾಯಿಮುಚ್ಚಿ ಮೂಕಪ್ರೇಕ್ಷರಾದರೆ ಅದೆಂತಹ ದೊಡ್ಡ ಬರಹಗಾರನಾದರೂ,ಅವರು ಸಾಹಿತಿಗಳಲ್ಲ,ಅವಕಾಶವಾದಿಗಳಾಗುತ್ತಾರೆ. ಮತ್ತೊಂದೆಡೆ ಓದದೇ ಬರೆಯಬಹುದು,ಆದರೂ ಓದಬೇಕು.ಸ್ವತಃ ತಾನೇ ಮತ್ತೊಬ್ಬರದನ್ನು ಓದದೇ, ನಮ್ಮ ಭವ್ಯ ಸಾಹಿತ್ಯದ ಇತಿಹಾಸವನ್ನೋದದೇ, ಹಿಂದಿನಿಂದ ನಡೆದುಕೊಂಡು ಬಂದ ಸಮಾಜದ ಬಗ್ಗೆ ಅವಲೋಕಿಸದೆ ನನ್ನದೇ ಓದಲಿ ಅಂತ ಅನ್ನಿಸಿದ್ದನ್ನು ಗೀಚುವವರನ್ನು ಹಾಗೂ ಖುಷಿಗಾಗಿ, ಆತ್ಮಸಂತೋಷಕ್ಕಾಗಿ ಬರೆಯುತ್ತೇನೆಂದರೆ ಅಭ್ಯಂತರವಿಲ್ಲ ಆದರೆ ಅದು ಸಾಹಿತ್ಯವಾಗಲಾರದು. ಅಂತ ಬರಹಗಳಿದ್ದರೆ ನಿಮಗೂ ನಿಮ್ಮ ಬರಹಕ್ಕೂ ನೆಲೆಯಿಲ್ಲದಾಗುತ್ತದೆ.. ಒಟ್ಟಾರೆಯಾಗಿ ಏನೇ ಆಗಲಿ,ಸಾಹಿತ್ಯದ ಮೂಲಕ ಸಮಾಜವನ್ನು ಕಟ್ಟುವ ಕೆಲಸಗಳು ಆಗಲಿ, ಸಾಹಿತ್ಯವನ್ನು ಉದ್ಯೋಗ ಮಾಡಿಕೊಂಡವರಿದ್ದಾರೆ, ಜೀವನಕ್ಕಾಗಿ ಸಾಹಿತ್ಯವನ್ನು ನೆಚ್ಚಿಕೊಂಡವರಿದ್ದಾರೆ. ಉದಯೋನ್ಮುಖರಾದ ನಾವುಗಳು ಸಮಾಜದ ಸಮಸ್ಯೆ,ರೋಧನೆಗಳಿಗೆ ಸ್ಪಂದಿಸಿ ಬರಹ, ಹೋರಾಟ, ಚಳುವಳಿಗಳ ಮೂಲಕ ಇನ್ನಾದರೂ ನಮ್ಮ ಲೇಖನಿಯ ವರಸೆ ಬದಲಿಸಿಕೊಂಡು ಸಾಧ್ಯವಾದಷ್ಟು ಜೀವವಿರೋಧಿಗೆ ಪ್ರತಿಧ್ವನಿಗಳಾಗೋಣ..!!! ******************************************************

ಸಮಾಜ ಕಟ್ಟುವಲ್ಲಿ ಸಾಹಿತ್ಯದ ಪಾತ್ರ Read Post »

You cannot copy content of this page

Scroll to Top