ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಅಪ್ಪಣ್ಣನಿಗೊಂದು ಮನವಿ

ಕವಿತೆ ಅಪ್ಪಣ್ಣನಿಗೊಂದು ಮನವಿ ಎ.ಎಸ್.ಮಕಾನದಾರ ಅಪ್ಪಣ್ಣಎಷ್ಟೊಂದು ಕತ್ತಿಗಳುಸೇರಿಕೊಂಡಿವೆ ನಿನ್ನ ಹಸಬಿಯೊಳುಆ ಕತ್ತಿಗಳೇ ಮಾಡಿದ ಕ್ಷೌರಹೇಗೆ ಸೂಚಿಸಿ ಬಿಡುತ್ತವೆ. ಆ ಚಾಂದ ದಾಡಿ ಮುಸ್ಲಿಮನದೆಂದುಆ ಜುಟ್ಟು ಬ್ರಾಹ್ಮಣನನದೆಂದುಆ ಕೆಳದಾಡಿ ಸಿಖ್ಖನದೆಂದುಆ ಫ್ರೆಂಚ್ ದಾಡಿ ಕ್ರಿಶ್ಚಿಯನನದೆಂದು ಮೀಸೆ ಬಿಟ್ಟರೊಂದು ಜಾತಿಕೇಶ ಬಿಟ್ಟರೊಂದು ಜಾತಿಮುಡಿ ಕಟ್ಟಿ ದಾಡಿ ಬಿಟ್ಟರೊಂದು ಜಾತಿಎಲ್ಲವನು ಬೋಳಿಸಿಟ್ಟುಹೊಸದೊಂದು ವ್ಯವಸ್ಥೆನಿರ್ಮಿಸಬಾರದಿತ್ತೇ ಅಪ್ಪಣ್ಣ ನೀನುಅಣ್ಣ ಅಕ್ಕ ಅಲ್ಲಮರೊಂದಿಗೆಅನುಭವ ಮಂಟಪದ ಚುಕ್ಕಾಣಿಯಾಗಿದ್ದಿ ಯಾಕಣ್ಣ ಈ ವ್ಯವಸ್ಥೆಗೆಕಡಿವಾಣ ಹಾಕದೆ ಸುಮ್ಮನಾದೆಗಂಡಲ್ಲದೆ-ಹೆಣ್ಣಲ್ಲದೆ ಒಳಗಿರುವಆತ್ಮಕ್ಕೆ ಅನುಭವ ಮಂಟಪದಲಿಅಂತರಂಗ ಶುದ್ಧಿ ಮಾಡಿದ ನೀನೇಬಹಿರಂಗ ಶುದ್ಧಿಗಾಗಿಮಾಡಿದ ಈ ಕ್ಷೌರದಿಂದಅದ್ಹೇಗೆ ಅಶಾಂತಿ ತಾಂಡವವಾಡುತ್ತಿದೆ ? ಅಪ್ಪಣ್ಣನಿನಗೆ ನೆನಪಾಗಲಿಲ್ಲವೇಶೂನ್ಯನಾದ ಅಣ್ಣ ಬೆತ್ತಲಾದ ಅಕ್ಕ ಜಗದ ಕೊಳೆ ತೊಳೆಯುವ ಮಾಚಿದೇವ ತನ್ನ ಚರ್ಮವನೇ ಕತ್ತರಿಸಿ ಚಡಾವುಮಾಡಿದ ಹರಳಯ್ಯ ಕಲ್ಯಾಣಮ್ಮ ಯುದ್ಧಕ್ಕೆ ವಿದಾಯವಿತ್ತ ಅಶೋಕ ಬುದ್ಧನಾದ ಸಿದ್ಧ ಅಂತೆಯೇಎಸೆದು ಬಿಡಲು ಹೇಳುಎಲ್ಲ ಸಹೋದರರಿಗೆಈ ಜಾತಿ ಸೂಚಕ ಕತ್ತಿಗಳನು…….. **********************************

ಅಪ್ಪಣ್ಣನಿಗೊಂದು ಮನವಿ Read Post »

ಕಾವ್ಯಯಾನ

ಗಾಂಧಾರಿ ಸಂತಾನ

ಕವಿತೆ ಗಾಂಧಾರಿ ಸಂತಾನ ಕಾತ್ಯಾಯಿನಿ ಕುಂಜಿಬೆಟ್ಟು ಆ ಸೂಯ೯ ಹೆರುತ್ತಾನೆನೀಲಿ ನೀಲಿ ಮೋಡ ಪರದೆಗಳಹೆರಿಗೆ ಮನೆಯಲ್ಲಿನೀಳ ನೀಳ ಬೆಳಕು ಶಿಶುಗಳಕಣ್ಣುಗಳಿಗೆ ಕತ್ತಲ ಪಟ್ಟಿ ಕಟ್ಟಿಕೊಂಡುಈ ಗಾಂಧಾರಿಯ ಹಾಗೆ!ಹೊತ್ತದ್ದು ಹೆತ್ತು ವೀರಶತಜನನಿಹೆತ್ತದ್ದು ಸತ್ತು ದುಃಖಶತಜನನಿ!ಬಸಿರ ಹೊಸೆಹೊಸೆದು ಅತ್ತರೂಈಗ ವೇದವ್ಯಾಸನಿಲ್ಲ ಮಡಕೆಯಿಲ್ಲಮಹಾಭಾರತ ಮುಗಿದು ಹೋಗಿದೆಕುರುಕ್ಷೇತ್ರದಲ್ಲಿ ಸಾಲು ಗಭಾ೯ಪಾತ! ಆ ಸೂಯ೯ನದ್ದೋ ಅಕ್ಷಯ ಗಭ೯ !ಪ್ರಸವಬೇನೆಯೇ ಇಲ್ಲದೆ ಹೆರುತ್ತಾನೆತನ್ನ ಬೇನೆಯನ್ನೆಲ್ಲ ಭೂಮಿಯಹೆಂಗಸರ ಗಭ೯ಗಳಿಗೆ ಹಂಚಿಬಿಟ್ಟಿದ್ದಾನೆಹೆರುಹೆರುತ್ತಲೇ ಕಳೆದುಕೊಳ್ಳುತ್ತ ಬಿಕ್ಕಿಬಿಕ್ಕಿ ಕಿರಣಗಳನ್ನು ಹೆತ್ತು ಒಂದು ನಿರಾಳ ಸೊನ್ನೆಯಾಗಿಮುಳುಗುತ್ತಾನೆಇರುಳಿಡೀ ಕಡಲಿಗೆ ಪ್ರಸವ ಬೇನೆಅದರ ಕೊನೆಯ ಬಿಕ್ಕೊಂದು ಚಂದ್ರನಾಗುತ್ತದೆಹೆತ್ತು ಕೊಡುತ್ತದೆ ಸೂಯ೯ನನ್ನು ಆಗಸಕ್ಕೆಭೋಗ೯ರೆಯುತ್ತಿರುತ್ತದೆ ದಿನವಿಡೀಬಾರೋ ಬಾರೋ…. ಎಂದುಅವ ಮತ್ತೆ ಮುಳುಗುತ್ತಾನೆನಾಳೆ ಕಡಲ ಗಭ೯ದಿಂದ ಮುತ್ತಂತೆ ಎದ್ದುಕಿರಣಗಳನ್ನು ಹೆತ್ತು ಭೂಮಿಗೆ ಕೊಡಲುಭೂಮಿ ಪಡೆಯುತ್ತಾಳೆ ಹಡೆದುಕಳೆದುಕೊಳ್ಳಲು ಅವ ಹೆತ್ತ ಕಿರಣಗಳುಗಂಡು ಹೆಣ್ಣು ಜೀವ ಸಂಕುಲಗಳಗಭ೯ಗಳಲ್ಲಿ ಉರಿಯುವ ಅಂಡಾಣು ವೀರ್ಯಾಣುಗಳಾಗುತ್ತವೆಭ್ರೂಣಗಳ ಎದೆಗಳಲ್ಲಿ ಜೀವ ದೀಪಗಳಾಗಿ ಬೆಳಗುತ್ತವೆಕುಡಿದೀಪಗಳ ಆರದಂತೆ ಪೊರೆಯುತ್ತವೆ ತಾಯಿ ಹಣತೆಗಭ೯ ಕೊಳಗಳಲ್ಲಿ ತೇಲುತ್ತವೆ ಭ್ರೂಣಗಳು ಕಂಗಳಲ್ಲಿ ಕಿರಣಗಳ ಚಿಮ್ಮಿಸುತ್ತ ಬೆಳಕಿನ ಕಿರಣಗಳನ್ನುಬಲದ ಕೈಯಲ್ಲಿ ಕೊಡುತ್ತಲೇಎಡದ ಕೈಯಲ್ಲಿ ಎಳೆದು ನುಂಗುತ್ತಲೇ ಇರುತ್ತಾನೆ ಅವ ಜೀವ ದೀಪಗಳನ್ನುಪ್ರಾಣಿ ಪಕ್ಷಿ ಕ್ರಿಮಿ ಕೀಟ ಮನು ಸಂಕುಲಈ ಗಾಂಧಾರಿಯದ್ದೇ ಸಂತಾನಹೊತ್ತದ್ದನ್ನು ಹೆತ್ತು ಭೂಮಿಗೆ ತೆತ್ತು ಕಾಡ್ಗಿಚ್ಚಲ್ಲಿ ಸುಟ್ಟು ಹೋಗುತ್ತಲೇ ಇರುತ್ತವೆಆ ಸೂಯ೯ನ ಬೆಳಕಿನ ಕಿರಣವೊಂದುಬೆಂಕಿಕೊಳ್ಳಿಯಾಗಿ ಎದೆಹೊಕ್ಕಮಸಣದ ಕ್ಷಣದಲ್ಲಿ ****************************

ಗಾಂಧಾರಿ ಸಂತಾನ Read Post »

ಪುಸ್ತಕ ಸಂಗಾತಿ

“ಮಧ್ಯಘಟ್ಟವೆಂಬ ಒಂದು ಮೈಲಿಗಲ್ಲು”

ಪುಸ್ತಕ ಸಂಗಾತಿ “ಮಧ್ಯಘಟ್ಟವೆಂಬ ಒಂದು ಮೈಲಿಗಲ್ಲು” ಊರೂರು ಅಲೆಯುತ್ತಲೆ ಬದುಕು ಕಟ್ಟಿಕೊಳ್ಳುವುದನ್ನು ಕಲಿತ ಮನುಷ್ಯನಿಗೆ ವಲಸೆ ಎನ್ನುವುದು ಅವನ ಬದುಕಿನ ಅವಿಭಾಜ್ಯ ಅಂಗ. ತನ್ನ ಅಸ್ತಿತ್ವದ ಸಲುವಾಗಿ, ಹೊಟ್ಟೆ ಪಾಡಿನ ಸಲುವಾಗಿ ಆತ ಸೂಕ್ತ ಸ್ಥಳವೊಂದರ ಆಯ್ಕೆಗೆ ತೊಡಗುತ್ತಾನೆ. ಇದು ಮನುಷ್ಯ ಸಹಜ ಪ್ರಕ್ರಿಯೆ ಅವನ ಈ ಕ್ರಮದಿಂದಾಗಿಯೇ ರಾಜ್ಯ ಸಾಮ್ರಾಜ್ಯಗಳು ಹುಟ್ಟಿಕೊಳ್ಳುತ್ತವೆ ಅಳಿಸಿಹೋಗುತ್ತವೆ. ಕೆಲವೊಂದು ಚರಿತ್ರೆಯಲ್ಲಿ ದಾಖಲಾಗುತ್ತವೆ ಮತ್ತೆ ಮುಖ್ಯವಲ್ಲದ್ದು ಎಲ್ಲಿಯೋ ಕಣ್ಮರೆಯಾಗಿ ಬಿಡುತ್ತವೆ. ಅಂತಹ ಒಂದು ಕಾಲಘಟ್ಟದ ಎಳೆಯನ್ನು ಹಿಡಿದು ಒಂದು ಶತಮಾನದ ಕತೆಯನ್ನು “ಮಧ್ಯಘಟ್ಟ” ಅನಾವರಣಗೊಳಿಸುತ್ತ ಹೋಗುತ್ತದೆ. ಇಲ್ಲಿ ರಾಜ ಮಹಾರಾಜರ ಕತೆಗಳಿಲ್ಲ. ಹೋರಾಡಿದ ಸೈನಿಕರ ಸಂಪುಟವು ಅಲ್ಲ. ಆದರೆ ಶುದ್ಧ ಮನುಷ್ಯ ಜೀವಿಗಳ ಜೀವನಕ್ರಮ ಅವರು ಬದುಕು ಕಟ್ಟಿಕೊಂಡ ರೀತಿ ಮತ್ತು ಅದರ ಸಲುವಾಗಿ ಅವರು ಪಡುವ ಪರಿಪಾಡಲು ಮತ್ತು ಇದ್ದಲ್ಲಿಯೇ ಬದುಕನ್ನು ಹಸನಾಗಿಸಿಕೊಳ್ಳುವ ಕ್ರಮ ಈ ಕಾದಂಬರಿಯ ಜೀವಾಳ.ಮಗಳನ್ನು ಮಧ್ಯಘಟ್ಟಕ್ಕೆ ಮದುವೆ ಮಾಡಿಕೊಡುವ ಭೂದೇವಿ ಕೇರಳದ ಕುಂಬಳೆಯಿಂದ ಮಧ್ಯಘಟ್ಟಕ್ಕೆ ಬರುವ ಜೊತೆಜೊತೆಗೆ ಕಾದಂಬರಿ ಆರಂಭವಾಗುತ್ತದೆ. ಅವಳ ಬರುವಿಕೆಯ ಜೊತೆಯಲ್ಲಿಯೇ ಮಧ್ಯಘಟ್ಟದ ದುರ್ಗಮ ಕಾಡು, ಮರ, ಅಲ್ಲಿನ ಕಠಿಣ ಜೀವನ ಪದ್ಧತಿ ಇವುಗಳು ತೆರೆದುಕೊಳ್ಳುತ್ತ ಹೋಗುತ್ತದೆ. ಭಾಷೆ ಬಾರದೆ ಪುಟ್ಟ ಮಕ್ಕಳ ಜೊತೆಗಿಟ್ಟುಕೊಂಡು ಒಂಭತ್ತು ನದಿಗಳನ್ನು ಹತ್ತು ದಿನಗಳವರೆಗೆ ಕಾಲ್ನಡಿಗೆಯಲ್ಲಿ ದಾಟಿ ಬರುವ ಆ ಕಾಲದ ಗಟ್ಟಿ ಹೆಣ್ಣುಮಗಳೊಬ್ಬಳನ್ನು ಈ ಕಾದಂಬರಿ ಸಶಕ್ತವಾಗಿ ಕಟ್ಟಿಕೊಡುತ್ತದೆ. ಯಾವ ಪರಿಚಯವು ಇಲ್ಲದೆ ಆಕೆಯ ಸಹಾಯಕ್ಕೆ ನಿಲ್ಲುವ ಅಪರಿಚಿತರು ಆ ಕಾಲಮಾನದ ಮನುಷ್ಯ ಸಂಬಂಧಗಳ ಕುರಿತಾಗಿ ಮಹತ್ವದ ಅಂಶವನ್ನು ಕಟ್ಟಿಕೊಡುತ್ತಾರೆ. ೬೦ ವರ್ಷದ ಹಿರಿಯರೊಬ್ಬರು ೧೮ ವರ್ಷದ ಹೆಣ್ಣುಮಗಳೊಬ್ಬಳನ್ನು ಮದುವೆಯಾಗುವುದು ಸ್ವಲ್ಪ ವಿಚಿತ್ರ ಎನ್ನಿಸಿದರೂ. ಕಾಲಘಟ್ಟದ ಅವಧಿಯಲ್ಲಿ ನೋಡಿದಾಗ, ಅಲ್ಲದೆ ಹೆಣ್ಣುಮಕ್ಕಳನ್ನು ಹೊರೆ ಎಂದು ಭಾವಿಸುವ ಮನಸ್ಥಿತಿ ಈಗಲೂ ಬದಲಾಗದೆ ಇರುವಾಗ ಆಗಿನ ಕಾಲಮಾನದಲ್ಲಿ ಇದು ಸರ್ವೇಸಾಮಾನ್ಯ ವಿಷಯವಾಗಿರಬಹುದು ಎಂದು ಅನ್ನಿಸುತ್ತದೆ. ಅದೇ ರೀತಿ ಯಾವ ಪ್ರಶ್ನೆಗಳು ಇಲ್ಲದೆ ಇದನ್ನು ಒಪ್ಪಿಕೊಳ್ಳುವ ಹೆಣ್ಣುಮಕ್ಕಳು ಕೂಡ ಬದುಕನ್ನು ಗೆದ್ದ ಉದಾಹರಣೆ ಶ್ರೀದೇವಿಯ ಮೂಲಕ ಅರಿಕೆಯಾಗುತ್ತದೆ. ಇದೇ ಕಾಲಘಟ್ಟದಲ್ಲಿ ಬರುವ ಶಕುಂತಲೆ, ಗಿರಿಜಮ್ಮ, ಆ ಕಾಲಮಾನದ ದುರಂತ ನಾಯಕಿಯರ ಪ್ರತಿ ರೂಪದಂತೆ ಕಾಣಿಸುತ್ತಾರೆ. ಬ್ರಾಹ್ಮಣ ವರ್ಗದಲ್ಲಿದ್ದ ವಿಧವಾ ಸಮಸ್ಯೆಯ ಪ್ರತಿಬಿಂಬದ ಹಾಗೆ ಇಬ್ಬರು ಕಾಣಿಸುತ್ತಾರೆ. ತನ್ನ ಹನ್ನೆರಡನೆ ಸಣ್ಣ ವಯಸ್ಸಿಗೆ ಮದುವೆಯಾಗಿ ಗಂಡನನ್ನು ಕಳೆದುಕೊಂಡ ಶಕುಂತಲೆ ಕೇಶಮುಂಡನ ಮಾಡಿಸಿಕೊಂಡು ಮನೆಯಿಂದ ಹೊರದಬ್ಬಿಸಿಕೊಳ್ಳುತ್ತಾಳೆ. ತುತ್ತು ಅನ್ನಕ್ಕೆ ಗತಿ ಇಲ್ಲದೆ ಯರ್ಯಾರದ್ದೋ ಕೈ ಕಾಲು ಹಿಡಿದು ಮಠ ಸೇರುತ್ತಾಳೆ. ಮಠದ ಚಾಕರಿಯಲ್ಲಿದ್ದ ಅರ್ಚಕನೊಬ್ಬನಿಂದ ಬಸಿರಾಗುತ್ತಾಳೆ. ವಿಧವೆ ಬಸಿರಾಗುವುದು ಸಹಿಸಲು ಸಾಧ್ಯವೇ ಇಲ್ಲದಂತಹ ಅಪಚಾರವಾದ್ದರಿಂದ ತಕ್ಷಣ ಪಂಚಾಯ್ತಿ ನಡೆದು ಶಕುಂತಲೆಯನ್ನು ದಾರಿ ತಪ್ಪಿದವಳು ಎಂದು ನಿರ್ಣಯಿಸಿ ಹೊರ ಹಾಕಲಾಗುತ್ತದೆ. ಆದರೆ ಅದಕ್ಕೆ ಸಂಬಂಧಿಸಿದ ಅರ್ಚಕ ಮಾತ್ರ ತನಗೂ ಇದಕ್ಕೂ ಸಂಬಂಧವೇ ಇಲ್ಲ ಎನ್ನುವ ಹಾಗೆ ದೇವರಿಗೆ ಆರತಿ ಎತ್ತುವುದರಲ್ಲಿ ತಲ್ಲೀನನಾಗಿರುತ್ತಾನೆ. “ತಪ್ಪು ನಡೆಯುವುದು ಬರಿ ಹೆಂಗಸರಿಂದಲೇ” ಎನ್ನುವ ಸಿದ್ಧ ಮಾದರಿಯ ಮನಸ್ಥಿತಿಯ ಕೈಗನ್ನಡಿಯಂತೆ ಕಾಣಿಸುತ್ತದೆ. ಆದರೆ ಅಸಹಾಯಕ ಹೆಂಗಸರಿರುವ ಹಾಗೆ ಹೃದಯವಂತ ಗಂಡಸರೂ ಇರುತ್ತಾರೆ ಎನ್ನುವುದಕ್ಕೂ ಈ ಘಟನೆಯೆ ಸಾಕ್ಷಿಯಾಗುತ್ತದೆ. ಹೊರದಬ್ಬಿಸಿಕೊಂಡ ಬಸುರಿ ಹೆಂಗಸರನ್ನು ಸಮಾಜದದ ವಿರೋಧದ ನಡುವೆಯು ನಾಗಪ್ಪ ಭಟ್ಟರು ಮದುವೆಯಾಗುತ್ತಾರೆ. ತನ್ನ ಸಂಬಂಧಿಕರ ಜಾತಿಯವರ ಕೆಂಗಣ್ಣಿಗೆ ಗುರಿಯಾಗುತ್ತಾರೆ. ಕೊನೆಗೆ ಅದು ಅವರ ಬಹಿಷ್ಕಾರದವರೆಗೆ ಬಂದು ನಿಲ್ಲುತ್ತದೆ. ಬಹಿಷ್ಕಾರಕ್ಕೆ ಒಳಗಾಗಿ ಕೊನೆಗೆ ತಮ್ಮ ಆಸ್ತಿಯನ್ನು ಕಳೆದುಕೊಳ್ಳುತ್ತಾರೆ. ಹೆಂಡತಿ ಮಗನ ಸಲುವಾಗಿ ಊರನ್ನೇ ಬಿಟ್ಟು ಬಂದು ತಾವು ನಂಬಿದ ಧ್ಯೇಯಗಳ ಬದುಕಿಸಿಕೊಳ್ಳುತ್ತಾರೆ. ಅಂತೆಯೇ ಜೀವನ ಪರ್ಯಂತ ಬಹಿಷ್ಕಾರಕ್ಕೆ ಒಳಗಾದ ಶಕುಂತಲೆ ಮಗ ಗಣಪತಿ ಭಟ್ಟ ತನ್ನ ಶ್ರಮದಿಂದಾಗಿ ಹೊಸ ಬದುಕನ್ನು ಕಟ್ಟಿಕೊಳ್ಳುತ್ತಾನೆ. ಇಲ್ಲಿ ಶಕುಂತಲೆ ಗೆಲ್ಲುತ್ತಾಳೆ. ಆದರೆ ಇದೇ ಪರಿಸ್ಥಿತಿಗೆ ಸಿಲುಕಿಕೊಳ್ಳುವ ಗಿರಿಜಮ್ಮ ಊರ ಮುಖಂಡನೊಬ್ಬನಿಗೆ ಬಸಿರಾಗುತ್ತಾಳೆ. ಆದರೆ ತನ್ನ ಬಸುರಿಗೆ ಕಾಣವಾದವನ ಹೆಸರನ್ನು ಮುಚ್ಚಿಡುವ ಸಲುವಾಗಿ ಅವನ ಆಜ್ಞೆಯಂತೆಯೇ ಊರಿನ ಹಲವರ ಹೆಸರು ಹೇಳಿ ಕೊನೆಗೆ ಗುರುಗಳೊಬ್ಬರ ಹೆಸರನ್ನು ಹೇಳಿ ಅವರ ಉರಿಗಣ್ಣಿಗೆ ಗುರಿಯಾಗಿ ಕೊನೆಗೆ ತನಗಿನ್ನು ಬದುಕು ಇಲ್ಲ ಎನ್ನುವ ನಿರ್ಣಯಕ್ಕೆ ಬಂದು ಹುಚ್ಚಿ ಎನ್ನುವ ಪಟ್ಟ ಕಟ್ಟಿಸಿಕೊಂಡು ಆತ್ಮಹತ್ಯೆಗೆ ಶರಣಾಗುತ್ತಾಳೆ. “ಕಿರೀಟ ತೊಟ್ಟವು ರಾಜರಾದ, ಪತ್ನಿ ಉಪಪತ್ನಿಯರನ್ನು ಸಂಪಾದಿಸಿದ, ಶ್ರೀಮಂತರು ತಾವು ರಾಜರ ಹಾಗೇಯ ಹೇಳಿ ತೋರಿಸಲೆ ತಲೆಮೇಲೆ ಮುಂಡಾಸ ಸುತ್ತಿದ. ಕಂಡವರನ್ನು ಬೇಕಾದ್ಹಂಗೆ ಬಳಸಿದ ಗರ್ಭಿಣಿಯಾಗಿದ್ದು ಗಿರಿಜಮ್ಮನ ತಪ್ಪು ಎಂದು ಎಲ್ಲರೂ ಹೇಳಿದವೇ ಹೊರತೂ ಅಂತ ಹಳಕಟ್ಟು ಕೆಲಸ ಮಾಡಿದ್ದು ಯಾವ ಗಂಡಸು ಹೇಳಿ ಗೊತ್ತಿದ್ದರೂ ಮಾತಾಡಿದ್ದಿಲ್ಲೆ ಪಂಚಾಯ್ತಿ ಸೇರಿಸಿ, ಗುರುಗಳೆದುರು ವಿಷಯ ಇಟ್ಟ ಮುಖ್ಯಸ್ಥನೇ ಈ ಕೆಲಸ ಮಾಡಿದ್ದಾದ್ರೂ ಬಡ ವಿಧವೆ ಗಿರಿಜಮ್ಮಂಗೆ ಸತ್ಯ ಹೇಳಲೇ ಉಸಿರು ಕಟ್ಟಿ ಹೋಯಿತು” ಈ ಸಾಲುಗಳು ಎಲ್ಲ ಕಾಲಕ್ಕು ಸಲ್ಲಬಹುದಾದ ಸಾಲುಗಳ ಹಾಗೆ ಕಾಣಿಸುತ್ತವೆ.ಮದುವೆ ಸಂಪ್ರದಾಯದ ಹೆಸರಿನಲ್ಲಿ ಹೆಣ್ಣನ್ನು ತನ್ನ ಮೂಲಭೂತ ಹಕ್ಕಿನಿಂದ, ಪ್ರಕೃತಿದತ್ತ ಆಸೆ ಆಸಕ್ತಿಗಳಿಂದ ವಂಚಿತಳನ್ನಾಗಿಸುವ ಈ ಹುನ್ನಾರಗಳಿಗೆ ಈ ಇಬ್ಬರು ಸಣ್ಣ ಸಾಕ್ಷಿಯಷ್ಟೆ. ಈ ಇಬ್ಬರ ನೆರಳ ಅಡಿಯಲ್ಲಿ ಕಳೆದುಹೋದವರೆಷ್ಟೊ.ಇನ್ನು ಈ ಇದಕ್ಕಿಂತ ತುಸು ಹೊರತಾಗಿ ಮಂಜಮ್ಮ ನಿಲ್ಲುತ್ತಾಳೆ. ಬಹುಶ: ಅದು ಬದಲಾದ ನಾಗರೀಕತೆಯ ಪರಿಣಾಮ ಮತ್ತು ಇಡೀ ಮಧ್ಯಘಟ್ಟ ನಿಧಾನವಾಗಿ ಹೊರಜಗತ್ತಿಗೆ ತೆರೆದುಕೊಂಡ ಪರಿಣಾಮವೂ ಇರಬಹುದು. ಆ ಹೊತ್ತಿಗೆ ಹೆಂಗಸರ ಯೋಚನಾಕ್ರಮವೂ ತುಸು ಬದಲಾಗುವುದನ್ನು ನಾವು ಕಾಣಬಹುದು. ಗಂಡ ಸತ್ತ ಮೇಲೆ ಮಂಜಿ ಸುಮ್ಮನೆ ಮನೆಯಲ್ಲಿ ಉಳಿಯುವುದಿಲ್ಲ. ಆಕೆಗೆ ಬದುಕಲೇ ಬೇಕಾದ ಅನಿವಾರ್ಯ. ಹೀಗಾಗಿ ಅವಳು ಗಂಡಸಿನ ಬಟ್ಟೆ ಧರಿಸಿ ಪೇಟೆಗೆ ಹೋಗುತ್ತಾಳೆ. ಮನೆಯ ವ್ಯವಹಾರವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಾಳೆ. ತನ್ನ ಪೇಟೆ ಅನುಭವವನ್ನು ಊರ ಹೆಂಗಸರಿಗೆಲ್ಲ ಹೇಳುತ್ತಾಳೆ. ಉಳಿಕೆ ಹೆಂಗಸರು ಅದನ್ನು ಸಾಹಸ ಎಂಬಂತೆ ಬಣ್ಣಿಸಿದರು ಪುರುಷ ಸಮಾಜದ ಪ್ರತಿರೂಪದಂತೆ ಕಾಣಿಸುವ ವಾಸುದೇವನಿಗೆ ಮಾತ್ರ ಇರುಸುಮುರುಸಾಗುತ್ತದೆ. “ಹೆಂಗಸ್ರಿಗೆ ಇಷ್ಟು ಧೈರ್ಯ ಇಪ್ಪಲಾಗ” ಎನ್ನುತ್ತಾನೆ. ಆದರೆ ಅವನ ಅಕ್ಕ ಶ್ರೀದೇವಿಗೆ ಸರಿಕಾಣುವುದಿಲ್ಲ. ಹೀಗಾಗಿಯೇ “ಮಂಜಿ ಪ್ಯಾಟಿಗೆ ಹೋಗಿ ವ್ಯವಹಾರ ಮಾಡದಿದ್ದರೆ ಮತ್ಯಾರು ಆ ಮನೆಗೆ ದಿಕ್ಕು ಆಗ್ತಿದ್ದ? ನೀನು ಆ ಮಕ್ಕಳಿಗೆ ಕೂಳು ಹಾಕ್ತಿದ್ಯ? ಎನ್ನುತ್ತ ಪ್ರಶ್ನಿಸುತ್ತಾಳೆ.ಹೀಗೆ ಮಧ್ಯಘಟ್ಟ ಇಡಿಯಾಗಿ ಕೆಲವೊಮ್ಮೆ ಹೆಣ್ಣು ಮಕ್ಕಳ ಬದುಕಿನ ಹಸೆಯ ಹಾಡಂತೆ ಕಾಣಿಸುತ್ತದೆ. ಸಂಸಾರದ ಜವಬ್ದಾರಿಯನ್ನೆ ಬಯಸದೆ ಊರೂರು ಸುತ್ತುತ್ತ ವರ್ಷಕ್ಕೊಂದು ಬಾರಿ ಮರೆಯದೆ ಬಂದು ಮಗುವ ಹುಟ್ಟಿಸಿ ಹೋಗುವ ಉಡಾಳ ಗಂಡನಿಂದಾಗಿ ರೋಸಿಟ್ಟು ಮಗಳ ಮದುವೆಯನ್ನು ಅಣ್ಣ ಕೈಕಾಲು ಹಿಡಿದು ಒಂದು ಹಂತಕ್ಕೆ ತಲುಪಿಸಿ ಇಲ್ಲಿಯೇ ಉಳಿದುಕೊಳ್ಳುವ ಭೂದೇವಿ.ಭಾಷೆಯೇ ಬಾರದ ಅಪರಿಚಿತ ಹಿರಿಯನೊಬ್ಬನ ಕೈ ಹಿಡಿದು ಸುಸೂತ್ರ ಸಂಸಾರ ನಡೆಸುತ್ತ ಹೋಗುವ ಶ್ರೀದೇವಿ. ಮಧ್ಯಘಟ್ಟಕ್ಕೂ ಕೇರಳಕ್ಕೂ ಕೊಂಡಿಯಾಗಿ ನಿಂತು ಬದುಕನ್ನು ಒಪ್ಪಗೊಳಿಸಲು ಯತ್ನಿಸುವ ಪುಡಿಯಮ್ಮ. ಪುರುಷ ಸಮಾಜದ ದಳ್ಳುರಿಗೆ ಬೆಂದು ನಿಡುಸುಯ್ಯುವ ಮತ್ತು ಅಲ್ಲಿಯೇ ಬದುಕು ಕಟ್ಟಿಕೊಳ್ಳುವ ಶಕುಂತಲೆ, ಮಂಜಮ್ಮ, ಕತೆಯಾಗಿ ಉಳಿದುಕೊಳ್ಳುವ ಗಿರಿಜೆ ಹೀಗೆ ಸಾಲು ಸಾಲು ಹೆಣ್ಣು ಮಕ್ಕಳ ಗಾಥೆಯೇ ಸಿಕ್ಕುತ್ತದೆ.ಮೂಲಕತೆ ಗೋಪಯ್ಯ ಶ್ರೀದೇವಿಯವರದ್ದು ಅದಕ್ಕೆ ಪೂರಕವಾದ ಭೂದೇವಿಯರದ್ದು ಎನ್ನಿಸಿದರು. ಇದು ಪೂರ್ತಿ ಮಧ್ಯಘಟ್ಟದ ತಲೆಮಾರುಗಳ ಕತೆ. ದಟ್ಟ ಕಾಡುಗಳ ನಡುವೆ ಬದುಕಿ ಕಟ್ಟಿಕೊಂಡವರ ಕತೆ. ಬಡತನದ ನಡುವೆಯು ಬಾಳೆಕಾಯಿಯನ್ನು ಬೇಯಿಸಿ ತಿಂದು ಬದುಕು ಕಟ್ಟಿಕೊಂಡವರ ಕತೆ. ಉಣ್ಣುವ ಗಂಜಿ ಉರುಳಿ ಹೋಗುತ್ತದೆ ಎನ್ನುವ ಕಾರಣಕ್ಕೆ ಅಡುಗೆ ಮನೆಯಲ್ಲಿ ಕುಳಿ ತೆಗೆದು ಉಂಡವರ ಕತೆ.ಕಾಡಿನ ಕತೆ. ನೆಲದ ಬೇರುಗಳ ಕತೆ. ಬದುಕನ್ನು ಬಂದಂತೆಯೆ ಬದುಕಿ ಹೋದವರ ಕತೆ. ತಮ್ಮ ನೂರು ಛಾಪುಗಳ ಒತ್ತಿ ಮುಂದಿನ ತಲೆಮಾರಿಗೆ ವರ್ಗಾಯಿಸಿದವರ ಕತೆ. ಹೊರಳಿಕೊಳ್ಳುವ ಬದುಕಿಗೆ ಸಾಕ್ಷಿಯಾದವರ ಕತೆ. ಕತೆಯಾಗದವರ ಕತೆ. ಈ ಕಾದಂಬರಿಯ ಅಲ್ಲಲ್ಲಿ ಕಾಣಿಸಿಕೊಳ್ಳುವ ತಮ್ಮ ನೋವುಗಳನ್ನು ಹಾಡಾಗಿಕೊಳ್ಳುವ ಹೆಣ್ಣುಮಕ್ಕಳ ಕತೆ.ಲೇಖಕರ ಅಗಾಧ ಪರಿಸರ ಪ್ರಜ್ಞೆ ಅದನ್ನು ಕತೆಗೆ ಪೂರಕವಾಗಿ ಬಳಸಿಕೊಂಡ ರೀತಿ ಮತ್ತು ಅದನ್ನು ಓದುಗನ ಎದೆಗೆ ಇಳಿಸುವ ಕ್ರಮ. ಈ ಎಲ್ಲವೂ ಈ ಹೊತ್ತಿಗೆಯನ್ನು ಕೈಗೆತ್ತಿಕೊಳ್ಳುವಂತೆ ಮಾಡುತ್ತವೆ.ಇನ್ನು ನವಿರಾದ ಹವ್ಯಕ ಭಾಷೆ. ಮಿಂಚು ಸುಳಿಯಂತೆ ಕಾಡುವ ರೂಪಕಗಳು, ಮಧ್ಯಘಟ್ಟದ ಮೂಲಕ ಒಂದು ಇಡೀ ಕಾಲಮಾನವನ್ನು ಅದರ ಹೊರಳುವಿಕೆಯನ್ನು ಸಶಕ್ತವಾಗಿ ಕಟ್ಟಿಕೊಡುತ್ತವೆ. ************************************** ದೀಪ್ತಿ ಭದ್ರಾವತಿ

“ಮಧ್ಯಘಟ್ಟವೆಂಬ ಒಂದು ಮೈಲಿಗಲ್ಲು” Read Post »

ಕಾವ್ಯಯಾನ

ಕ್ರಿಸ್ತನಿಗೆ ಒಂದು ಪ್ರಶ್ನೆ

ಕ್ರಿಸ್ತನಿಗೆ ಒಂದು ಪ್ರಶ್ನೆ ಅಕ್ಷತಾ ರಾಜ್ ನೀನಂದು ನೋಡಿದೆಯೆಂದರು….ಯಾವ ಹೊಸರೂಪವಿತ್ತು ಬಾನಿನಲ್ಲಿ?ಹೊಳೆವ ನಕ್ಷತ್ರವೇ! ಅಥವಾ ಕಾರ್ಮುಗಿಲೇ!ಇದ್ಯಾವುದೂ ಅಲ್ಲವೆಂದರೆ ಉಲ್ಕೆ ಪ್ರವಾಹವೇ?ಯಾವುದೂ ಅರ್ಥವಾಗದಿದ್ದಾಗ ನಿನ್ನ ಹುಟ್ಟೆಂದರುಹೌದೇ ! ನಿನ್ನ ಹುಟ್ಟಷ್ಟು ಅಪರೂಪವೇ ಬಿಸಿಲು ಬೆಳ್ದಿಂಗಳಂತೆ? ನೀನಂದು ಅತ್ತೆಯೆಂದರು….ಯಾವ ತಾಪದ ಹನಿ ತೋಯ್ದಿತ್ತು ನೆಲ ?ಚುಚ್ಚಿದ ಮೊಳೆಯದ್ದೇ ! ಅಥವಾ ಹೊತ್ತ ಶಿಲುಬೆಯದ್ದೇ!ಇದಾವುದೂ ಅಲ್ಲವೆಂದರೆ ಮುಳ್ಳುಕೀರೀಟದ ಭಾರವೇ?ಯಾವುದೂ ಅರ್ಥವಾಗದಿದ್ದಾಗ ತನುವಿನ ನೋವೆಂದರುಹೌದೇ ! ನಿನ್ನ ಕಂಬನಿಯಷ್ಟು ದುರ್ಬಲವೇ ಮಂಜಿನಂತೆ ? ನೀನಂದು ನಕ್ಕೆಯೆಂದರುಮತ್ತೆ ಮೂರು ದಿನದೊಳಗೆ ಎದ್ದು ಬಂದಾಗಯಾವ ಸಂತಸಕ್ಕಾಗಿ ಮುಖ ಅರಳಿತ್ತು?ತೆರೆದ ಪೆಟ್ಟಿಗೆಗಾಗಿ ! ಅಥವಾ ಮಾಸು ಗಾಯಕ್ಕಾಗಿ !ಅಲ್ಲವೆಂದರೆ ಎದುರಿದ್ದವರಿಗಾಗಿ ?ಅರಿವಾಗದೆಯೇ ಮತ್ತೆ ಹುಟ್ಟಿಬಂದ ಸಂತಸವೆಂದರುಹೌದೇ ! ನಿನ್ನ ನಗು ಅಷ್ಟು ಅಪರೂಪವೇ ಕುರುಂಜಿಹೂವಿನಂತೆ ? ತಿಳಿಯಲೇ ಇಲ್ಲ, ನೀನು ಬಂದು ಹೋಗಿರುವುದುಆದರೂ ಚರಿತ್ರೆಯಾಯಿತು ನೀನಿದ್ದ ಆ ಮಧ್ಯಕಾಲಪೂರ್ವಾರ್ಧವೋ ! ಉತ್ತರಾರ್ಧವೋ ! ಶಕೆಯಾಯಿತು ಕಾಲನಾವೂ ಇದ್ದೇವೆ ಅರ್ಥವಾಗದ ಅದೇ ಅರ್ಧದೊಳಗೆ **********************************

ಕ್ರಿಸ್ತನಿಗೆ ಒಂದು ಪ್ರಶ್ನೆ Read Post »

ಕಾವ್ಯಯಾನ

ಮುಗುಳು

ಮುಗುಳು ವೀಣಾ ರಮೇಶ್ ಇರುಳ ಸೆರಗೊಳಗೆತಿಳಿಮೌನ ಸುರಿದುಬಿಗುಮಾನ ಕಳೆದುಬೆರೆತು ಗಂಧದೊಳಗೆಈ ಮನವದು ಬಿರಿದುನಿನ್ನ ಸನಿಹದಲಿಮೌನವದು ಘಾಸಿ ಬಯಲು ಅಲಯದಲಿಹಕ್ಕಿ ಹಾರುತಿದೆನಿನ್ನನೆನಪುಗಳ ರೆಕ್ಕೆಕಟ್ಟಿ, ಪ್ರತಿದಿನವೂ ಸೋತಿದೆಹಾರಿ ಬರಲೇನು ಈಹೃದಯ ತಟ್ಟಿ ಮುಸುಕು ಬೀರಿದ ಮುಗುಳುಲಜ್ಜೆಯೊಳಗೆ ಅದೇ ನೀನುಸಜೆಯಾಗಿದೆ ಪ್ರೀತಿಯಸರಳೊಳಗೆ ನಾನು ಎಳೆದು ಬಿಡು ಮುಸುಕುಬೀರಿ ಮಲಗಿದ,ಮೌನದ ಪರದೆನಿನಗಲ್ಲವದು ಶೋಭೆನಿನ್ನ ಮುಗುಳುನಗುವದು ಹೊತ್ತು ತರದೆಮೌನ ಕೋಟೆಗೆ ಪ್ರಭೆ **************************

ಮುಗುಳು Read Post »

ಕಾವ್ಯಯಾನ

ಹಾಯ್ಕು

ಹಾಯ್ಚಳಿ! ಶಾಲಿನಿ ಆರ್. ೧)ಚಳಿ ಸುಳಿಗೆ    ಶಿಲೆಯಾದಳವಳು    ಕರಗದಂತೆ ೨)ಬೆಚ್ಚಿಸದಿರು    ಬೆಚ್ಚಗಿಡು ನೆನಪಾ    ಕೊನೆ ಚಳಿಗೆ ೩)ಮಂಜಿನ ಹನಿ    ಕರಗಲರಿಯದು    ಬೆಚ್ಚಗಾದರೂ, ೪)ಬಿರಿದ ತುಟಿ    ನೆನಪಿಸುತಿದೆಯೋ,    ವಸಂತ ಋತು, ೫)ಬಿಸಿ ಬಿಸಿ ಚಾ    ಮುಂಜಾನೆಯ ಚಳಿಗೆ    ನೀ ನೆನಪಾದೆ, ೬)ಹಗಲು ಮಾಯ    ಇರುಳ ಹಾಸಿನ ಮೇಲೆ    ಚಳಿ ಗಾಳಿಗೆ ೭)ನಮ್ಮೀ ಪ್ರೀತಿಗೆ    ಮರೆಯಾಯಿತೇನು    ಹಗಲು ನಾಚಿ, ೮)ತೇವಗೊಂಡಿದೆ    ಮತ್ತೆ ಆರುವ ಮುನ್ನ    ಹೇಮಂತ ಋತು, ೯)ಮುಗಿಯದಿದು    ಮಾಗಿ ಮುಗಿವ ಮುನ್ನ    ಮಬ್ಬಿನ್ಹಗಲು ೧೦)ಹಗಲು ನುಂಗಿ       ಬಿಗಿಯಾದವು ಇರುಳು       ಬಿಗುಮಾನದಿ ******************    

ಹಾಯ್ಕು Read Post »

ಕಾವ್ಯಯಾನ

ಯುಗ ಯುಗದ ಸೀತೆಯರು

ಯುಗ ಯುಗದ ಸೀತೆಯರು ರೇಶ್ಮಾಗುಳೇದಗುಡ್ಡಾಕರ್ ಇದು ಚರಿತ್ರೆಯ ಅವತಾರವಲ್ಲನಿತ್ಯವು ಉದ್ಭವಿಸುವಉದ್ವೇಗಗಳಿಗೆ ಇತಿಹಾಸಮರುಕಳಿಸುತ್ತಲೇತನ್ನ ಇರವ ಸಾಧಿಸುತ್ತದೆಯಲ್ಲ … ರಾಮನಿಲ್ಲದ ಸೀತೆಯರಿಗೆಕಮ್ಮಿ ಇಲ್ಲ ಈ ಜಗದಲ್ಲಿಒಡಲ ಕುಡಿಗಾಗಿ ಬದುಕಸವೆಸುವಳು ಕಂಡವರಸೆರಗಲ್ಲಿ ಗಂಡ ಬಿದ್ದರು ತನ್ನಬೆವರ ಹನಿಯ ದೀಪವಾಗಿಸಿಮನೆಯ ಬೆಳಗುವಳು …. ನೊರೆಂಟು ಮಾತುಗಳುಹಾದಿ – ಬೀದಿಯ ರಂಪಗಳುಎಷ್ಟಿದ್ದರು ಮನವದು ಗಟ್ಟಿಯಾಗುತ್ತಲೆಸಾಗುವದು ಕಲ್ಲು ಬಂಡೆಯನ್ನು ಮೀರಿಸಿಬದುಕಿನ ದಾರಿಯ ಹಿಡಿಯುವುದು ಸಮಯದೊಂದಿಗೆ ಓಡಿತಿಂಗಳ ಪಗಾರವನು ಕಾಪಿಟ್ಟುಪುಟ್ಟ ಪುಟ್ಟ ಕನಸ ನೇರವೇರಿಸಿತನ್ನ ಒಡಲ ಸಿರಿಗಾಗಿ ನಗುವ ಕಾಣುವಳುಎಲ್ಲ‌ ನೋವ ಮರೆತು ….. ತ್ರೇತಾಯುಗದ ಸೀತೆಗೆ ಕಾಡಾದರೂ ಇತ್ತು ;ನವಯುಗದ ಹೆಣ್ಣುಗಳಿಗೆಕಾಂಕ್ರೀಟ್ ಕೋಣೆಯು ದಹಿಸುವದುಅಂತರಾತ್ಮವ ಬಡಿದು ಹಿಡಿದುಹಿಪ್ಪೆಮಾಡಿ ಸಂತಸ ಪಡುವದು ..! ಸೀತೆಯ ಯುಗವು ಅಳಿಯದೆನವನವೀನ ಸಮಸ್ಯೆಗಳ ಸರಮಾಲೆಯಲ್ಲಿರೂಪಾಂತರಗೊಂಡು ಹೊಸಮನ್ವಂತರ ವಾದರೊ,ಅವಳ ನೋವಿನ ಛಾಯೇ ಉಳಿಸಿಕೊಂಡುಮತ್ತೆ ಮತ್ತೆ ಅವತರಿಸುತಿಹುದು …. *************************************

ಯುಗ ಯುಗದ ಸೀತೆಯರು Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಮರುಳಸಿದ್ದಪ್ಪ ದೊಡ್ಡಮನಿ ಹಸಿದ ಕೂಸಿಗೆ ಹಾಲಿಲ್ಲದೆ ಅಳುತಿದೆ ಸಖಿಸೊಸಿದ ಹಾಲಿಗೆ ವಿಷವು ಬೆರೆತಿದೆ ಸಖಿ ದುಡಿವ ಕೈಗೆ ಕೆಲಸವಿಲ್ಲದೆ ನೊಂದಿದೆ ಬದುಕುಗಗನಕ್ಕೆರಿದ ಬೆಲೆ ಕಂಡು ಮನ ಒದ್ದಾಡುತಿದೆ ಸಖಿ ಉಳ್ಳವರ ಉಡಿ ತುಂಬಿ ತುಳುಕ್ಯಾಡಿ ಹೋಗಿವೆಬಡವರ ಮನೆ ದೀಪಕೆ ಎಣ್ಣೆಇಲ್ಲದೆ ಆರುತಿದೆ ಸಖಿ ಎಲ್ಲಿಯ ತನಕ ಹುಚ್ಚಾಟ ಕಚ್ಚಾಟ ತಿಳಿಯದುಮನು ಕುಲಕೆ ಹೊಸೆದು ಬತ್ತಿ ಇಡುತಿದೆ ಸಖಿ ಮರುಳ ನಮ್ಮನಾಳುವ ದೊರೆಗೆ ಸಿರಿವಂತರ ಚಿಂತಿನಾಡು ಹಾಳಾಗುತ ನಾಳೆ ಹತ್ತಿರ ಬರುತಿದೆ ಸಖಿ ******************************************

ಗಜಲ್ Read Post »

ಅಂಕಣ ಸಂಗಾತಿ, ಕೇರಿ ಕೊಪ್ಪಗಳ ನಡುವೆ

ಅಂಕಣ ಬರಹ ಕತೆಗಾರ ರಾಮಕೃಷ್ಣ ಗುಂದಿ ಅವರ ಆತ್ಮಕಥೆ ….5 ಅಪ್ಪ ಅವ್ವನ ಅದ್ಧೂರಿ ಮದುವೆ             ಜೋಯ್ಡಾದಲ್ಲಿ ಶಾನುಭೋಗಿಕೆಯ ಕೆಲಸ ತುಂಬಾ ಅನುಕೂಲಕರವಾಗಿತ್ತು. ತಿಂಗಳ ಸಂಬಳದಲ್ಲಿ ಒಂದು ಪೈಸೆಯನ್ನೂ ಖರ್ಚುಮಾಡಗೊಡದೆ ಹಳ್ಳಿಯ ರೈತಾಪಿ ಜನ ದವಸ-ಧಾನ್ಯ ತರಕಾರಿಗಳನ್ನೆಲ್ಲ ತಂದುಕೊಟ್ಟು ಸಹಕರಿಸುತ್ತಿದ್ದರಂತೆ. ಚಾವಡಿಯ ಒಂದು ಮೂಲೆಯಲ್ಲಿಯೇ ವಾಸ್ತವ್ಯಕ್ಕೆ ಅವಕಾಶವೂ ಇತ್ತು. ಬೆಟ್ಟದ ಹಳ್ಳಿಗಾಡಿನ ಹಳೆಯ ಕಟ್ಟಡವಾದ್ದರಿಂದ ಸಹಜವಾಗಿಯೇ ಕೋಣೆ ತುಂಬಾ ಬಿಲಗಳಿದ್ದವು. ಆ ಬಿಲಗಳಲ್ಲಿ ಆಗಾಗ ಕಾಣಿಸಿಕೊಳ್ಳುವ ಇಲಿ ಹೆಗ್ಗಣ ಮತ್ತು ಅವುಗಳ ವಾಸನೆ ಹಿಡಿದು ಅಲ್ಲಿಗೆ ಬಂದು ಹೋಗುವ ವಿವಿಧ ಜಾತಿಯ ಹಾವುಗಳ ಉಪದ್ರವ ಬಿಟ್ಟರೆ ಊರಿನ ಜನ ತುಂಬ ಗೌರವದಿಂದ ಸಹಕರಿಸುತ್ತಿದ್ದರಂತೆ. ಆದರೆ, ಗಣಪು ಮಾಸ್ತರನಾಗಬೇಕೆಂದು ಬಯಸಿದ್ದರಿಂದ ಈ ಉದ್ಯೋಗ ಅಷ್ಟೇನೂ ತೃಪ್ತಿ ನೀಡಿರಲಿಲ್ಲ.             ಎರಡು ತಿಂಗಳಲ್ಲೇ ಸರಕಾರಿ ಶಾಲೆಯೊಂದರಲ್ಲಿ ಮಾಸ್ತರಿಕೆಯ ಆದೇಶ ಬಂದಿದೆಯೆಂಬ ಸುದ್ದಿ ಊರಿಂದ ಬಂತು. ಗಣಪು ಹಿಂದೆಮುಂದೆ ನೋಡದೆ ಶಾನುಭೋಗ ಹುದ್ದೆಗೆ ರಾಜೀನಾಮೆ ನೀಡಿ ಊರಿಗೆ ಮರಳಿದ. ಆದರೆ ಈ ರಾಜೀನಾಮೆ ಪ್ರಕ್ರಿಯೆಯಲ್ಲಿ ಎಂಟುದಿನ ತಡವಾಗಿತ್ತು. ಗಣಪು ಊರಿಗೆ ಬಂದು ಆದೇಶವನ್ನು ಪಡೆಯುವಷ್ಟರಲ್ಲಿ ಶಿಕ್ಷಣ ಇಲಾಖೆ ತನ್ನ ಆದೇಶವನ್ನು ಬದಲಿಸಿ ಬೇರೊಬ್ಬ ಶಿಕ್ಷಕನನ್ನು ನೇಮಿಸಿಕೊಂಡಾಗಿತ್ತು.             ಆರು ತಿಂಗಳ ಕಾಲ ಕೈಗೆ ಸಿಕ್ಕ ಉದ್ಯೋಗವನ್ನು ಕಳೆದುಕೊಂಡು ನಿರುದ್ಯೋಗಿಯಾಗಿದ್ದ ಗಣಪುವಿನ ಚಡಪಡಿಕೆಯ ದಿನಗಳಲ್ಲಿ ನಾಡುಮಾಸ್ಕೇರಿಯ ರಾಕು ಬೆನ್ನಿಗೆ ನಿಂತು ಧೈರ್ಯ ತುಂಬುತ್ತಿದ್ದನಂತೆ. ಆರು ತಿಂಗಳ ಬಳಿಕ ಮತ್ತೆ ಮಾಸ್ತರಿಕೆಯ ಆದೇಶ ಬಂತು. ಹೆಗ್ರೆ ಗ್ರಾಮದ ಶಾಲೆಗೆ ಗಣಪು ಮಾಸ್ತರನಾದ.             ಮಾಸ್ತರಿಕೆ ದೊರೆತು ಜೀವನದ ದಾರಿ ಭದ್ರವಾದ ಬಳಿಕ ಗಣಪು ಮದುವೆಗೆ ಯೋಗ್ಯ ವರ’ ಎಂಬ ಭಾವನೆ ಜಾತಿ ಬಾಂಧವರಲ್ಲಿ ಮೂಡಿತು. ಈ ನಡುವೆ ಗುಂದಿಹಿತ್ತಲಿನ ಸಂಪರ್ಕದಿಂದ ದೂರವೇ ಉಳಿಯುತ್ತಿದ್ದ ಗಣಪು ತನ್ನ ಗೆಳೆಯ ರಾಕುವಿನ ಕುಟುಂಬಕ್ಕೆ ಸಹಜವಾಗಿಯೇ ಹತ್ತಿರವಾಗಿದ್ದ. ಹೀಗಾಗಿ ಗಣಪುವಿನ ಮದುವೆಯ ಜವಾಬ್ದಾರಿಯನ್ನು ರಾಕುವೇ ಕೈಗೆತ್ತಿಕೊಂಡು ಕನ್ಯಾ ಶೋಧಕ್ಕೆ ತೊಡಗಿದ.             ರಾಕುವಿನ ಅಣ್ಣನ ಮಗಳು ತುಳಸಿ ಹನ್ನೆರಡರ ಎಳೆಯ ಮಗು. ಇನ್ನೂ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದಾಳೆ. ರಾಕುವಿಗೆ ಅದೇ ವಯಸ್ಸಿನ ಸ್ವಂತ ಮಗಳೊಬ್ಬಳಿದ್ದಾಳೆ. ಅವಳು ಶಾಲೆ ಕಲಿಯುತ್ತಿಲ್ಲ. ಹಾಗಾಗಿ ರಾಕು ಅಣ್ಣನ ಮಗಳು ತುಳಸಿಯನ್ನು ಗಣಪುವಿಗೆ ಮದುವೆ ಮಾಡಲು ಸಂಕಲ್ಪ ಮಾಡಿದ. ಜಾತಿ ಬಾಂಧವರು ಕೂಡ “ಕಲಿತ ಹುಡುಗಿ ಯೋಗ್ಯವಧು” ಎಂದು ಅನುಮೋದನೆ ನೀಡಿದರು. ಹುಡುಗಿಯ ವಯಸ್ಸು ಚಿಕ್ಕದು ಎಂಬ ಸಣ್ಣ ಅಪಸ್ವರವೊಂದು ಕೇಳಿ ಬಂತಾದರೂ ಅದನ್ನು ಯಾರೂ ಗಂಭೀರವಾಗಿ ಪರಿಗಣಿಸಲಿಲ್ಲ. ಗಣಪು ಮತ್ತು ತುಳಸಿಯರ ಮದುವೆ ನಿಶ್ಚಯವಾಯಿತು.             ಎಲ್ಲರಿಗಿಂತ ಹೆಚ್ಚು ಸಂತಸ ಸಂಭ್ರಮ ಪಟ್ಟವಳು ತುಳಸಿಯ ಅವ್ವ ನಾಗಮ್ಮಜ್ಜಿ. ಮಾಸ್ತರಿಕೆಯಲ್ಲಿರುವ ಅಳಿಯ ದೊರೆತಿರುವುದು ಅಂದಿನ ಕಾಲಕ್ಕೆ, ಅದರಲ್ಲಿಯೂ ಅಪರೂಪವಾಗಿ ಶಿಕ್ಷಣ ಸಂಸ್ಕಾರ ಪಡೆಯುತ್ತಿರುವ ಆಗೇರ ಜನಾಂಗದಲ್ಲಿ ಸಾಮಾನ್ಯ ಸಂಗತಿಯಾಗಿರಲಿಲ್ಲ. ಗಂಡ ಗತಿಸಿದ ಬಳಿಕ ಮಗಳ ಭವಿಷ್ಯವೊಂದನ್ನೇ ಮುಖ್ಯ ಗುರಿಯನ್ನಾಗಿಟ್ಟುಕೊಂಡು ಹಿಲ್ಲೂರಿಗೆ ಹೊರಟು ಬೇಸಾಯಕ್ಕೆ ಬಯಸಿದ ನಾಗಮ್ಮಜ್ಜಿ ಅಲ್ಲಿಯ ವೈಫಲ್ಯದಿಂದಾಗಿ ಮರಳಿ ನಾಡುಮಾಸ್ಕೇರಿಗೆ ಬಂದಿದ್ದಳು. ಇಲ್ಲಿ ಕೂಲಿ ಮಾಡುತ್ತ ಮಗಳನ್ನು ಮತ್ತೆ ಶಾಲೆಗೆ ಸೇರಿಸಿದ್ದಳು. ಅಂಥ ಛಲಗಾರ್ತಿಯಾದ ಹೆಂಗಸಿಗೆ ಮಾಸ್ತರನೊಬ್ಬ ಅಳಿಯನಾಗುತ್ತಾನೆ ಎಂಬುದೇ ಸ್ವರ್ಗದಂಥ ಖುಷಿಯ ಸಂಗತಿ. ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಬೇಕೆಂದೇ ಸಂಕಲ್ಪ ಮಾಡಿದಳು.             ಲಂಕೇಶರು ಹೇಳಿದ ಹಾಗೆ ಬನದ ಕರಡಿಯಂತೆ ನಾಗಮ್ಮಜ್ಜಿ ಅಕ್ಕಿ, ಬೆಲ್ಲ, ಬಾಳೆ, ಹಲಸು, ಬಾಳೆಲೆಗಳನ್ನೆಲ್ಲಾ ಸಂಗ್ರಹಿಸತೊಡಗಿದಳು. ಹಿಲ್ಲೂರಿನಂಥ ಬೆಟ್ಟದಲ್ಲಿ ಬೇಸಾಯ ಮಾಡಿ ಬಂದ ದುಡಿಮೆಯ ಅನುಭವ ಅವಳದು. ಅದಾಗಲೇ ಅಲ್ಲಿಯ ನೆಂಟರೆಲ್ಲ ಭತ್ತ, ಕಬ್ಬು ಬೆಳೆಯುತ್ತ, ಬೆಲ್ಲದ ಕೊಡಗಳನ್ನೂ, ಅಕ್ಕಿಮೂಡೆಗಳನ್ನು ದಾಸ್ತಾನು ಮಾಡುವ ಹಂತ ತಲುಪಿದ್ದರು. ನಾಗಮ್ಮಜ್ಜಿ ಸ್ವತಃ ಹಿಲ್ಲೂರಿಗೆ ಹೋಗಿ ಅಕ್ಕಿ, ಬೆಲ್ಲ, ಬಾಳಿಗೊನೆ, ಹಲಸು ಇತ್ಯಾದಿಗಳನ್ನು ಸಾಕು ಸಾಕೆಂಬಂತೆ ಸಂಗ್ರಹಿಸಿ ಅವುಗಳನ್ನು ದೋಣಿಯಲ್ಲಿ ತುಂಬಿ ಗಂಗಾವಳಿ ನದಿಯ ಮೂಲಕವೇ ಊರಿಗೆ ಸಾಗಿಸಿದಳು. ಹಿಲ್ಲೂರಿನ ಎಲ್ಲ ಜಾತಿಬಂಧುಗಳಿಗೆ ಮದುವೆಗೆ ತಪ್ಪದೇ ಬರುವಂತೆ ವೀಳ್ಯ ನೀಡಿದ್ದಲ್ಲದೆ, ಊರಿಗೆ ಬರುತ್ತ ನದಿಯ ದಂಡೆಗುಂಟ ಇರುವ ಗುಂಡಬಾಳಾ, ಮೊಗಟಾ, ಸಗಡಗೇರಿ, ಅಗ್ಗರಗೋಣ ಮುಂತಾದ ಊರುಗಳ ಒಳಹೊಕ್ಕು ನೆಂಟರಿಷ್ಟರ ಪ್ರತಿಯೊಂದು ಮನೆಯಲ್ಲೂ ಅಳಿಯ ಮಾಸ್ತರನಿದ್ದಾನೆ’ ಎಂದು ಅಭಿಮಾನದಿಂದ ಹೇಳಿಕೊಂಡು ವೀಳ್ಯ ನೀಡಿ ಬಂದಳು.             ನಾಡುಮಾಸ್ಕೇರಿ ಮತ್ತು ಆಸುಪಾಸಿನ ಎಲ್ಲ ಜಾತಿ ಬಂಧುಗಳನ್ನು, ಪರಜಾತಿಯ ಹಿತೈಷಿಗಳನ್ನು ಕರೆಸಿಕೊಂಡು ಅದ್ದೂರಿಯಾದ ಹಂದರದಲ್ಲಿ ಮಗಳನ್ನು ಗಣಪು ಮಾಸ್ತರನಿಗೆ ಧಾರೆಯೆರೆದ ನಾಗಮ್ಮಜ್ಜಿ, ತಂದೆಯಿಲ್ಲದ ಕೊರತೆಯನ್ನೇ ತೋರಗೊಡದ ಚಿಕ್ಕಪ್ಪ ರಾಕು, ತುಳಸಿಯನ್ನು ದಾಂಪತ್ಯಜೀವನದ ಹೊಸ್ತಿಲಲ್ಲಿ ನಿಲ್ಲಿಸಿದರು. ಹಿರಿಯರ ಸಂಭ್ರಮ ಸಡಗರಗಳನ್ನು ಬೆರಗುಗಣ್ಣುಗಳಿಂದ ನೋಡುವುದನ್ನು ಬಿಟ್ಟರೆ ಹನ್ನೆರಡರ ಹರೆಯದ ಮುಗ್ಧ ತುಳಸಿಗೆ “ವಿವಾಹ ಏನು? ಏಕೆ?” ಎಂಬ ಅರ್ಥವೂ ತಿಳಿದಿರಲಿಲ್ಲ.             ನಾಡುಮಾಸ್ಕೇರಿಯಿಂದ ಗದ್ದೆ ಬಯಲಿಗೆ ಇಳಿದರೆ ಮಾರು ದೂರದಲ್ಲಿ ಸಿಗಬಹುದಾದ ವರನ ಮನೆಯಿರುವ ಗುಂದಿಹಿತ್ತಲಿಗೆ ಸೇರಬೇಕಾದ ದಿಬ್ಬಣ ನಾಗಮ್ಮಜ್ಜಿಯ ಸೂಚನೆಯ ಮೇರೆಗೆ ಹನೇಹಳ್ಳಿಯ ರಾಜಮಾರ್ಗದಲ್ಲಿ ಮೆರವಣಿಗೆ ಹೊರಟು ಬಾವಿಕೊಡ್ಲ, ಬಂಕಿಕೊಡ್ಲ, ಹನೇಹಳ್ಳಿ, ಹೆಗ್ರೆಗಳಲ್ಲಿ ಹಾದು ನಡುವೆ ಸಿಕ್ಕ ಬಂಧುಗಳ ಮನೆಯಲ್ಲಿ ಆರತಿ ಆಶೀರ್ವಾದ ಸ್ವೀಕರಿಸುತ್ತಾ ಗುಂದಿಹಿತ್ತಲಿನ ವರನ ಮನೆಯನ್ನು ಪ್ರವೇಶಿಸುವಾಗ ನಡುರಾತ್ರಿ ಸಮೀಪಿಸಿತ್ತಂತೆ.             ಹೀಗೆ ನಡೆಯಿತು ನಮ್ಮ ಅಪ್ಪ ಅಮ್ಮನ ಅದ್ದೂರಿ ಮದುವೆ. ********************************

Read Post »

You cannot copy content of this page

Scroll to Top