ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಅನುವಾದಿತ ಕವಿತೆ

ರಾಹತ್ ಇಂದೋರಿ ಕನ್ನಡಕ್ಕೆ:ರುಕ್ಮಿಣಿ ನಾಗಣ್ಣವರ ವಿರೋಧವಿದ್ದರೆ ಇರಲಿ ಅದು ಪ್ರಾಣ ಅಲ್ಲವಲ್ಲಇದೆಲ್ಲವೂ ಮುಸುಕು ಹೊಗೆ ಆಕಾಶ ಅಲ್ಲವಲ್ಲ ಬೆಂಕಿ ಹೊತ್ತಿದರೆ ಆಹುತಿ ಆಗುವವು ಬಹಳ ಮನೆಇಲ್ಲಿರುವುದು ಕೇವಲ‌ ನನ್ನ ಮನೆ ಮಾತ್ರ ಅಲ್ಲವಲ್ಲ ನಾನು ಹೇಳಿರುವುದೇ ಇಲ್ಲಿ ಅಂತಿಮಬಾಯೊಳಗೆ ಇರುವುದು ನಿನ್ನ ನಾಲಗೆ ಅಲ್ಲವಲ್ಲ ನನಗೆ ಗೊತ್ತಿದೆ ಅಸಂಖ್ಯ ವೈರಿಗಳು ಇರುವರುನನ್ನ ಹಾಗೆ ಜೀವ ಕೈಯಲ್ಲಿ ಹಿಡಿದವರು ಅಲ್ಲವಲ್ಲ ಇಂದಿನ ಈ ಪಾಳೆಗಾರಿಕೆ ನಾಳೆ ಇರುವುದಿಲ್ಲಅವರು ಬಾಡಿಗೆದಾರರು, ಸ್ವಂತದ ಮನೆ ಅಲ್ಲವಲ್ಲ ಇಲ್ಲಿನ ಮಣ್ಣಲ್ಲಿ ಎಲ್ಲರ ನೆತ್ತರ ಹನಿಯೂ ಸೇರಿದೆಈ ಹಿಂದೂಸ್ತಾನ್ ಯಾರ ಅಪ್ಪನದೂ ಅಲ್ಲವಲ್ಲ ******************************

ಅನುವಾದಿತ ಕವಿತೆ Read Post »

ಅಂಕಣ ಸಂಗಾತಿ, ದಿಕ್ಸೂಚಿ

ಅಂಕಣ

ಆಗದು ಎಂದು ಹೇಳಲು ಕಲಿಯಿರಿ ಕಲಿಸಿರಿ ಎಲ್ಲದಕ್ಕೂ ಹೂಂ ಎನ್ನುವ ಸ್ವಭಾವ ಬಹಳ ಜನರಲ್ಲಿ ಬೇ ರೂರಿದೆ. ಹೀಗಾಗಿ ಅವರೆಲ್ಲ ಹೌದಪ್ಪಗಳಾಗಿದ್ದಾರೆ.ಪ್ರತಿ ಯೊಂದು ಕೆಲಸಕ್ಕೂ ಹೂಂ ಎಂದು ಒತ್ತಡ ಆತಂಕವನ್ನು ಅನಾಯಾಸವಾಗಿ ತಾವೇ ಮೈ ಮೇಲೆ ಎಳೆದು ಕೊಳ್ಳುತ್ತಾ ರೆ.ಯಾವುದಕ್ಕೂ ಇಲ್ಲ ಎಂದು ಹೇಳಿ ರೂಢಿಯೇ ಇಲ್ಲ. ಇಲ್ಲ ಎಂದು ಹೇಳುವುದು ಅಗೌರವ ಎಂದೇ ಭಾವಿಸಿದ್ದೇ ವೆ.ನನಗೀಗ ತಾವು ಹೇಳಿದ ಕೆಲಸ ಮಾಡಲಾಗುವುದಿಲ್ಲ. ನಾನು ಬೇರೊಂದು ಕಾರ್ಯದಲ್ಲಿ ಮಗ್ನನಾಗಿದ್ದೇನೆ ಎಂದು ಎದುರಿಗಿನವರು ನಮ್ಮನ್ನು ತಪ್ಪಾಗಿ ತಿಳಿಯುತ್ತಾರೆಂದು ನಾವೇ ತಪ್ಪಾಗಿ ಅರ್ಥೈಸಿಕೊಂಡು ಬಿಡುತ್ತೇವೆ. ಹೂಂ  ಎಂದು ಎಲ್ಲ ಕಾರ್ಯಗಳನ್ನು ಒಪ್ಪಿಕೊಳ್ಳುವುದು ಸೌಜನ್ಯತೆಯ ಲಕ್ಷಣ. ಆಂಗ್ಲ ನುಡಿಯಂತೆ ಸೌಜನ್ಯವು ಶತ್ರುವನ್ನು ಗೆಲ್ಲುತ್ತದೆ ಎಂಬುದೇನೋ ನಿಜ.ಮ್ಯಾಂಟಿಗೋ ಹೇಳುವಂತೆ ಸೌಜನ್ಯಕ್ಕೆ ವೆಚ್ಚವೇನೂ ಹಿಡಿಯುವುದಿಲ್ಲ, ಆದರೆ ಸೌಜನ್ಯವು ಎಲ್ಲವನ್ನೂ ಕೊಂಡುಕೊಳ್ಳುತ್ತದೆಂಬ ಮಾತು ಅಷ್ಟೇ ದಿಟ. ಅಪಮಾನಕರ ಸಂಗತಿ ಅಲ್ಲ.ಒಲ್ಲೆ ಬೇಡ ಎಂದು ಹೇಳುವುದು ಅಪಮಾನಕರ ಎಂಬ ಹುರು ಳಿಲ್ಲದ ನಂಬಿಕೆಯಲ್ಲಿ ಬಿದ್ದು ನರಳುವವರನ್ನು ನೋಡುತ್ತೇ ವೆ ಅವರಿಂದ ಪಾಠ ಕಲಿಯದೇ ನಾವೂ ಅದೇ ಬಲೆಯಲ್ಲಿ ಬೀಳಲು ಹವಣಿಸುತ್ತೇವೆ.ದಾಕ್ಷಿಣ್ಯಕ್ಕೆ ಬಿದ್ದು ಬೇಡ ಒಲ್ಲೆ ಎನ್ನದೇ ಒಪ್ಪಿಕೊಂಡ ಸಂಗತಿಗಳು ನುಂಗಲಾರದ ತುತ್ತಾಗಿ ಪರಿಣಮಿಸುತ್ತವೆ.ಎಂಬುದು ಅನುಭವಿಸಿದವರಿಗೆ ಗೊತ್ತು ಬಲವಂತಕ್ಕೆ ಬಲಿಪಶುಗಳಾಗುವುದಕ್ಕಿಂತ ನಿರ್ದಾಕ್ಷಿಣ್ಯದಿಂ ದ ಮಾತನಾಡುವುದು ಒಳಿತು. ದಾಕ್ಷಿಣ್ಯಕ್ಕೆ ಒತ್ತು ಕೊಟ್ಟರೆ ಬಲಿಯಾಗುವಿರಿ. ಆಲಿವರ್ ಗೋಲ್ಡ್ ಸ್ಮಿತ್ ಹೇಳಿದಂತೆ ಸಹೃದಯತೆ ಕರುಣೆ ಹೊಂದಿದ ವ್ಯಕ್ತಿಯನ್ನು ಸಮಾಜ ಸದಾ ಗುರುತಿಸುತ್ತದೆ. ಹೀಗಾಗಿ ಸಹೃದಯತೆಯನ್ನು ಮೆರೆಯಿರಿ ಹೊರತು ದಾಕ್ಷಿ ಣ್ಯದ ಹೊರೆ ಹೊತ್ತು ಬೇಸರಿಸಿಕೊಂಡು,ನಿಮ್ಮ ಮನದ ಪ್ರಶಾಂತತೆಯನ್ನು ಕಳೆದುಕೊಳ್ಳದಿರಿ.ಹೌದಪ್ಪಗಳಾಗಬೇಡಿ  ಪ್ರತಿಯೊಂದಕ್ಕೂ ಹೂಂ ಎನ್ನುವ ಹೌದು ಎಂದು ಗೋಣು ಅಲ್ಲಾಡಿಸಿ ಹೌದಪ್ಪ (ಎಸ್ ಮ್ಯಾನ್)ಗಳಾಗಲು ಕಾರಣಗ ಳು ಅನೇಕ.ಅವುಗಳಲ್ಲಿ ಧೈರ್ಯವಿಲ್ಲದಿರುವುದೂ ಒಂದು ನಮಗ್ಯಾಕೆ ಉಸಾಬರಿ? ಹೂಂ ಎಂದರೆ ಬೀಸೋ ದೊಣ್ಣೆ ಯಿಂದ ತಪ್ಪಿಸಿಕೊಂಡಂತೆ ಎಂಬ ಜಾಯಮಾನ. ಒಲ್ಲೆ ಇಲ್ಲ ಬೇಡ ಎಂದರೆ ಗುಂಪಿನಿಂದ ಹೊರ ಹೋಗಬೇಕಾಗು ತ್ತೆ. ಎಲ್ಲರೊಂದಿಗೆ ಗೋವಿಂದ ಅಂದರೆ ಮುಗಿದು ಹೋ ಯಿತು. ಅತಿ ಮುಖ್ಯ ಕಾರಣವೆಂದರೆ ಎಲ್ಲರಲ್ಲಿಯೂ ತಾ ನು ವಿಭಿನ್ನ ವಿಶಿಷ್ಟ ಎಂದು ಗುರುತಿಸಿಕೊಳ್ಳಲು ಹೇಳುವ ಎಲ್ಲ ಕೆಲಸಗಳನ್ನು ಒಪ್ಪಿಕೊಳ್ಳುವುದು.ಯಾವ ಕೆಲಸವನ್ನು ಪೂರ್ಣಗೊಳಿಸದೇ ಒದ್ದಾಡುವುದು.ಒಂದು ಸಂಗತಿ ನೆನ ಪಿರಲಿ ಎಲ್ಲವನ್ನೂ ಮಾಡಲು ಹೋದರೆ ಯಾವುದನ್ನೂ ಪೂರ್ಣ ಮಾಡಲಾಗುವುದಿಲ್ಲ. ಯಶಸ್ವಿ ವ್ಯಕ್ತಿ ಎಂದು ಕರೆಸಿಕೊಳ್ಳಲು ಪ್ರಯತ್ನಿಸಿ ಅಪ ಮಾನಕ್ಕೀಡಾಗುವ ಪ್ರಸಂಗಗಳೇ ಹೆಚ್ಚಾಗುವವು.ಇಂಥವ ರನ್ನು ಕಂಡೇ “ಯಶಸ್ವಿಯಾಗಲು ಪ್ರಯತ್ನಿಸಬೇಡಿ, ಅದಕ್ಕೆ ಬದಲು ಮೌಲ್ಯವುಳ್ಳ ಘನತೆ ವ್ಯಕ್ತಿಯಾಗಲು ಪ್ರಯತ್ನಿಸಿ.” ಎಂದು ಅಲ್ಬರ್ಟ್  ಐನ್ ಸ್ಟೀನ್ ಹೇಳಿರಬಹುದು.ನಯ ವಾಗಿ ನಿರಾಕರಿಸಿ.ನೀವು ನಿಗದಿತ ಸಮಯದಲ್ಲಿ ಮಾಡ ಲೇಬೇಕಾದ ಕಾರ್ಯದಲ್ಲಿ ಮಗ್ನರಾದಾಗ ಬೇರೆಯವರು ತಮ್ಮ ಯಾವುದೇ ಕೆಲಸ ಹೇಳಿದರೆ ನನ್ನಿಂದ ಈಗ ತಾವು ಹೇಳಿದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲವೆಂದು ನಯವಾಗಿ ನಿರಾಕರಿಸಿ. ಊಟ ತಿಂಡಿ ವಿಷಯಗಳಲ್ಲೂ ನಿಮಗೆ ಬಲವಂತ ಮಾಡಿ ಬಡಿಸುವಾಗ, ಮತ್ತಷ್ಟು ತಿನ್ನುವಂತೆ ಒತ್ತಾಯಿಸಿದಾಗ, ಹೊಟ್ಟೆ ತುಂಬಿದೆ ಸಾಕು ಎಂದು ನಿರಾಕರಿಸಿ.ಪಾರ್ಟಿಗಳಲ್ಲಿ ನಿಮ್ಮ ಗೆಳೆಯ/ತಿಯರು ನಿಮ್ಮ ಅಭಿರುಚಿಗೆ ಹೊಂದದ ಆಹಾರಗಳನ್ನು ಪೇಯಗಳನ್ನು ತಿನ್ನಲು ಆಗ್ರಹ ಪಡಿಸಿದರೆ ನಿರ್ಭಿಡೆಯಿಂದ ನಾನು ಒಲ್ಲೆ ಎಂದು ಹೇಳಿ.ನಿಮ್ಮತನವ ನ್ನು ಕಾಪಾಡಿಕೊಳ್ಳಿ.ಯಾರದೋ ಇಷ್ಟಕ್ಕೆ ನಿಮ್ಮ ಇಷ್ಟದ ವಿರುದ್ಧ ನಡೆದುಕೊಳ್ಳಬೇಡಿ.ನಿರ್ದಾಕ್ಷಿಣ್ಯವಾಗಿ ವರ್ತಿಸಿ. ನೇರ ಮಾತುಗಾರರಿಗೆ ಗೆಳೆಯರು ಕಡಿಮೆ. ನೇರವಾಗಿ ಮುಚ್ಚು ಮರೆಯಿಲ್ಲದೇ ಮಾತನಾಡುವವರಿಂದ ಬಹಳ ಜನ ದೂರವಿರಲು ಬಯಸುತ್ತಾರೆ.ಅವರೊಂದಿಗೆ ಇರುವು ದರಿಂದ ಯಾವಾಗ ಮಾನ ಹರಾಜು ಹಾಕುತ್ತಾರೋ ಎನ್ನುವ ಭಯ ಕಾಡುತ್ತದೆ. ಕಡ್ಡಿ ತುಂಡು ಮಾಡಿದಂತೆ ಮಾತನಾಡುವವರೊಂದಿಗೆ ಸ್ನೇಹದ ಹಸ್ತ ಚಾಚುವುದು ವಿರಳ.ನಿದಾಕ್ಷಿಣ್ಯವಾಗಿ ಮಾತ ನಾಡಿಯೂ ಸ್ನೇಹಿತರನ್ನು ಉಳಿಸಿಕೊಳ್ಳಬಹುದು ಗಳಿಸಿ ಕೊಳ್ಳಬಹುದು. ಅದು ನೀವು ಉಪಯೋಗಿಸುವ ಪದಗ ಳು ಮಾತನಾಡುವ ದಾಟಿ ಮತ್ತು  ತೋರುವ ಕಾಳಜಿಯ ಮೇಲೆ ಅವಲಂಬಿತವಾಗಿರುತ್ತದೆ.ಇಲ್ಲಿ ಬಹಳ ಮುಖ್ಯವಾ ದ ವ್ಯತ್ಯಾಸವೆಂದರೆ ಭಾವನಾತ್ಮಕ ವ್ಯತ್ಯಾಸ. ವರ್ಚಸ್ಸು ಹೆಚ್ಚಿಸಿಕೊಳ್ಳಿ.ಬಂಧು ಬಾಂಧವರಲ್ಲಿ ಸಮಾಜದಲ್ಲಿ ನನ್ನ ವರ್ಚಸ್ಸು ತುಂಬಾ ಚೆನ್ನಾಗಿದೆ. ಯಾರೂ ಯಾವುದೂ ಸಹಾಯ ಕೇಳಿದರೂ ಇಲ್ಲ, ಆಗದು ಎಂದು ಹೇಳಿದರೆ ನನ್ನ ವರ್ಚಸ್ಸಿಗೆ ದಕ್ಕೆ ಬರುತ್ತದೆ. ಇಲ್ಲ ಎಂದು ಹೇಳಿದರೆ ಅವರಿಗೆಲ್ಲ ಅತೃಪ್ತಿಯಾಗುತ್ತದೆ. ಆಗಲ್ಲ ಎಂದರೆ ಅವರಿಗೆ ಕೋಪ ಬರುತ್ತದೆ ಎಂದೆಲ್ಲ ನೀವೇ ಭಾವಿಸಿ ನನ್ನಿಂದಾಗದು ಇಲ್ಲ ಎಂದು ಮನಸ್ಸು ಕೂಗಿ ಹೇಳಿದರೂ ಅದರ ಮಾತಿಗೆ ಸೊಪ್ಪು ಹಾಕದೇ ಸಂಕೋಚ ಪಟ್ಟು ಕೊಂಡು ಕೋಲೆತ್ತಿನ ತರಹ ಗೋಣು ಹಾಕಿ ಬಿಡುತ್ತೀರಿ. ನಂತರ ನಿನ್ನಿಂದ  ಅವ ರಿಗೆಲ್ಲ ಸಂಪೂರ್ಣ ನೆರವು ಪೂರೈಸಲಾಗದೇ ಗೋಳಾಡು ವ ಪ್ರಸಂಗ ಎದುರಾಗುತ್ತದೆ. ಸಹಾಯ ನಿರೀಕ್ಷಿಸಿದವರಿಗೆ ನಿರಾಸೆ ಉಂಟಾಗಿ ನಿಮ್ಮನ್ನು ಹಾಡಿ ಹರಿಸುತ್ತಾರೆ. ಇದೆಲ್ಲ ಕ್ಕಿಂತ ಇಲ್ಲ- ಆಗದು- ನಾನು ಒಲ್ಲೆ ಎಂದು ನೇರವಾಗಿ ಹೇ ಳಿದರೆ ನಿಮ್ಮ ವ್ಯಕ್ತಿತ್ವದ ವರ್ಚಸ್ಸು ಇನ್ನಷ್ಟು ಹೆಚ್ಚಾಗುತ್ತದೆ. ನಿಸ್ಸಂಕೋಚವಾಗಿ ತಿಳಿಸಿ ಹತ್ತು ಜನರೊಂದಿಗಿದ್ದಾಗ ಅವ ರ ಹಾಗೆ ನಡೆದುಕೊಳ್ಳದಿದ್ದರೆ ಸಾಮರಸ್ಯತೆ ಇಲ್ಲ ಸಮನ್ವತೆ ಕೊರತೆ ಇದೆ ಎಂದುಕೊಳ್ಳುತ್ತಾರೆ ಎಂದು ಅವರ ಮುಲಾ ಜಿಗೆ ಒಳಗಾಗಿ ಕುಡಿಯುವುದು ತಿನ್ನುವುದು ಸೇದುವುದಕ್ಕೆ ಹೂಂ ಎನ್ನದಿರಿ. ಕೂಡಿ ನಡೆಯುವಾಗ ಬಾಳುವಾಗ ಸಾ ಮರಸ್ಯತೆ ಸಮನ್ವತೆ ಮುಖ್ಯ ನಿಜ. ಹಾಗಂತ ನಿಮ್ಮ ವ್ಯಕ್ತಿ ತ್ವಕ್ಕೆ ದಕ್ಕೆ ತರುವಂಥ ದುಷ್ಕೃತ್ಯಗಳಿಗೆ ಗಟ್ಟಿಯಾಗಿ ಒಲ್ಲೆ ಎಂದು ಹೇಳಿ. ಇಂಥ ಜನರಿಗೆ ತಪ್ಪು ಅಭಿಪ್ರಾಯಗಳಿಗೆ ಎಡೆ ಮಾಡಿಕೊಡದಂತೆ ಸ್ಪಷ್ಟವಾಗಿ ನಿಸ್ಸಂಕೋಚವಾಗಿ ತಿ ಳಿಸಿ ಬಿಡಿ. ಇದರಿಂದ ಬೇರೆಯವರೂ ತಮ್ಮ ತಪ್ಪನ್ನು ತಿದ್ದಿ ಕೊಳ್ಳುವ ಸಾಧ್ಯತೆ ಇದೆ.ಇತರರೊಂದಿಗೆ ಕೆಲಸ ಮಾಡುವಾ ಗ ಸ್ನೇಹ ಸ್ಪೂರ್ತಿ ಸಮನ್ವತೆಗಳಿಂದ ಸೇರಿಕೊಳ್ಳಿ.ನೀವು ಸ್ನೇಹಪರ ಭಾವನೆಗಳನ್ನು ವ್ಯಕ್ತ ಪಡಿಸುವ ರೀತಿಯಲ್ಲಿ ಎದುರಿಗಿನವರು ಅರ್ಥ ಮಾಡಿಕೊಳ್ಳುತ್ತಾರೆ. ಮನೆಯಲ್ಲಿ ನಿಮ್ಮ ಸಹೋದರ/ರಿಗೆ ಚಿಕ್ಕ ಮಕ್ಕಳಿಗೂ ಖಚಿತವಾಗಿ ನಿರ್ಧಿಷ್ಟವಾಗಿ ನಿರ್ದಾಕ್ಷಿಣ್ಯವಾಗಿ ಬೇಡ ಎಂದು ಹೇಳಲು ಕಲಿಸಿ ಮಾರ್ಗದರ್ಶನ ನೀಡಿ. ಹೀಗೆ ಕಲಿಸಿಕೊಡುವುದರಿಂ ದ ಮುಂದಾಗುವ ನೋವುಗಳು ತಪ್ಪುತ್ತವೆ.  ಇಲ್ಲ ಆಗದು ನಾನು ಒಲ್ಲೆ ಎಂದು ಹೇಳದಿರುವುದು ಸಣ್ಣ ತಪ್ಪು ಎಂದು ನಿರ್ಲಕ್ಷಿಸಬೇಡಿ. ದೊಡ್ಡ ಹಡಗನ್ನು ಸಣ್ಣ ರಂಧ್ರವೇ ಮುಳುಗಿಸುತ್ತದೆ. ಬುದ್ಧಿವಂತಿಕೆಯಿದ್ದರೆ ಅಂದುಕೊಂಡದ್ದನ್ನು ಸಾಧಿಸಲು ಸಾಧ್ಯ.ಇತರರು ನಿನಗೆ ಇಲ್ಲ-ಆಗದು ಎಂದು ಹೇಳಿದಾಗಲೂ ಒಪ್ಪಿಕೊಳ್ಳುವ ಗುಣ ಬೆಳೆಸಿಕೊಳ್ಳಿ. ಎಲ್ಲದಕ್ಕೂ ಇಲ್ಲ ಆಗದು ಎಂಬುದನ್ನು ಕಲಿಯಬೇಡಿ.ಇಲ್ಲ ಎಂದು ಹೇಳುವುದು ಮತ್ತು ನಕಾರಾತ್ಮಕವಾಗಿ ಸ್ಪಂದಿಸುವುದು ಎರಡೂ ಒಂದೇ ಅಲ್ಲ ಎಂಬುದು ನೆನಪಿನಲ್ಲಿರಲಿ.ಅಗತ್ಯತೆ ಬಿದ್ದಾಗ ಇತರರ ನೆರವಿಗೆ ಧಾವಿಸಿ. ಸಂಕಷ್ಟದಲ್ಲಿರುವವರ ಮೊರೆಗೆ ಕಿವಿಗೊಡುವುದನ್ನು ಮರೆಯದಿರಿ. ******************************** ಲೇಖಕರ ಬಗ್ಗೆ ಲೇಖಕಿ ಜಯಶ್ರೀ ಜೆ ಅಬ್ಬಿಗೇರಿ ಸರಕಾರಿ ಪದವಿ ಪೂರ‍್ವ ಕಾಲೇಜಿನಲ್ಲಿ ಆಂಗ್ಲ ಭಾಷಾ ಉಪನ್ಯಾಸಕಿ . ಇವರ ಹನ್ನೆರಡು ಪುಸ್ತಕಗಳು ಪ್ರಕಟಗೊಂಡಿವೆ. ಓದು ಮತ್ತು ಬರಹ ಹಾಡುಗಾರಿಕೆ ಮಾತುಗಾರಿಕೆ ಇವರ ಹವ್ಯಾಸಗಳು

ಅಂಕಣ Read Post »

ಅಂಕಣ ಸಂಗಾತಿ, ಮುಖಾಮುಖಿ

ಮುಖಾಮುಖಿ

ಅಂಕಣ ಬರಹ ಮುಖಾಮುಖಿಯಲ್ಲಿ ರೇಖಾಭಟ್ ನಮ್ಮೊಳಗಿನ ಪ್ರೀತಿ, ಕರುಣೆ, ಮಮತೆಗಳೇ ದೇವರು ರೇಖಾ ಗಜಾನನ ಭಟ್ಟ ವಜ್ರಳ್ಳಿ ಹತ್ತಿರದ ಹೊನ್ನಗದ್ದೆಯವರು. ಯಲ್ಲಾಪುರದ ಕುಂದೂರು ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ. ಇವರ ಪತಿ ಹೈಸ್ಕೂಲ್ ಶಿಕ್ಷಕರು. ಗಾಯನ ಮತ್ತು ಬರವಣಿಗೆ ಇವರ ಹವ್ಯಾಸಗಳು. ಗಜಲ್ ಬರೆಯುವುದರ ಮೂಲಕ ಕನ್ನಡ ಸಾಹಿತ್ಯವನ್ನು ಪ್ರವೇಶಿಸಿದ್ದಾರೆ. ಇವರ ಚೊಚ್ಚಿಲ ಕೃತಿಯನ್ನು ಮಡಿಲ ನಕ್ಷತ್ರವನ್ನು ಅದಿತಿ ಪ್ರಕಾಶನ ಪ್ರಕಟಿಸಿದೆ. ಈ ಕೃತಿಯ ಪ್ರಕಟಣೆಗೆ ಕನ್ನಡ ಪುಸ್ತಕ ಪ್ರಾಧಿಕಾರ ಧನ ಸಹಾಯ ಮಾಡಿದೆ. ಕನ್ನಡದಲ್ಲಿ ಯುವ ಬರಹಗಾರರನ್ನು ಪ್ರೋತ್ಸಾಹಿಸುವ ಪರಂಪರೆ ಇದೆ. ಆ ಸಾಲಿನಲ್ಲಿ ಈ ವರ್ಷ ಉತ್ತರ ಕನ್ನಡದಿಂದ ಆಯ್ಕೆಯಾದವರು ರೇಖಾ ಭಟ್ಟ. ವಚನಗಳನ್ನು, ದಾಸ ಸಾಹಿತ್ಯವನ್ನು ಇಷ್ಟಪಟ್ಟು ಓದುವ ರೇಖಾ ಭಟ್ಟ ಕನ್ನಡದ ಬೇಂದ್ರೆ ಮತ್ತು ಎಚ್.ಎಸ್.ವೆಂಕಟೇಶ ಮೂರ್ತಿ ಅವರ ಕವಿತೆಗಳನ್ನು ಇಷ್ಟಪಡುತ್ತಾರೆ. ಸಾಹಿತ್ಯ ಕ್ಷೇತ್ರದಲ್ಲಿ ನಾನಿನ್ನು ಎಳಸು ಎಂಬ ವಿನಯ ಸಹ ಅವರಲ್ಲಿದೆ. ವೈಚಾರಿಕ ಸಾಹಿತ್ಯ ಮತ್ತು ಪ್ರಗತಿಪರ ಧೋರಣೆಗಳನ್ನು ಗ್ರಹಿಸುವ ಮನಸ್ಸು ಸಹ ಅವರಲ್ಲಿದೆ. `ನಿನ್ನ ಮಾತುಗಳ ಧ್ವನಿಸಲೆಂದು ನಾ ಮೌನವನ್ನು ತಬ್ಬಿಕೊಂಡೆ, ನಿನ್ನ ಕನಸುಗಳು ಅರಳಲೆಂದು ನನ್ನ ಬಯಕೆಗಳ ಬಸಿದು ಕೊಂಡೆ’ ಎನ್ನುವ ರೇಖಾ ಅವರ ಗಜಲ್ ಗಳಲ್ಲಿ ಹೊಸತನದ ಹುಟುಕಾಟವೂ ಇದೆ. ಬಿಡುಗಡೆಯ ಹಂಬಲವೂ ಇದೆ. `ನಿನ್ನ ನೆನಪುಗಳ ಹೊರತಾಗಿ ಬೇರೇನೂ ಉಳಿದಿಲ್ಲ ಗೆಳೆಯಾ ದಹಿಸುತಿರುವ ವಿರಹದುರಿಯು ಏನನ್ನೂ ಉಳಿಸಿಲ್ಲ ಗೆಳೆಯಾ ‘ ಹೂಬನದಲಿ ಬರೀ ಮುಳ್ಳುಗಳೇ ಕಣ್ಣುಗಳ ಇರಿಯುತಿವೆ ಯಾಕೆ ವಿಷಾದದಲಿ ಬೆಂದ ಮನದಂತೆ ನೆಟ್ಟ ನೋಟವೂ ನೆಟ್ಟಗಿಲ್ಲ ಗೆಳೆಯಾ ಗಜಲ್ ಪ್ರಕಾರ ವಿರಹವನ್ನು ಪ್ರೇಮದ ಉತ್ಕಟತೆಯನ್ನು ಹೇಳಲು ಸಮರ್ಥವಾದ ಅಭಿವ್ಯಕ್ತಿಯ ಒಂದು ಪ್ರಕಾರ. ಈಚೆಗೆ ಗಜಲ್‌ನಲ್ಲಿ ವಿರಹ ಮತ್ತು ಪ್ರೇಮವೈಫಲ್ಯವನ್ನು ಮೀರಿ ಬದುಕಿನ ನಾನಾ ಬವಣೆಗಳನ್ನು, ಖುಷಿಯನ್ನು ಸಹ ಹೇಳಲು ಬಳಕೆಯಾಗುತ್ತಿದೆ. ರೇಖಾ ಅವರ ಮಡಿಲ ನಕ್ಷತ್ರದಲ್ಲಿ ಗಜಲ್ ಪ್ರಕಾರ ಹಳೆಯ ನೆನಪುಗಳ ಜೊತೆಗೆ ಸಮಾಜದ ಅನೇಕ ಸಂಗತಿಗಳ ವಿಮರ್ಶೆಯ ಒಳನೋಟವೂ ಇದೆ. ನನ್ನ ಗೆಳೆಯರಾದ ಕೋಲಾರದ  ದೊಡ್ಡಕಲ್ಲಹಳ್ಳಿ ನಾರಾಯಣಪ್ಪ , ಶಿರಸಿ ತಾಲೂಕು ಹೊಸ್ಮನೆ ಗ್ರಾಮದ ಗಣೇಶ್ ಹೆಗಡೆ ಹೊಸ್ಮನೆ ಸಹ ಗಜಲ್ ಗಳನ್ನು ಬರೆಯುವಾಗ ಭಿನ್ನ ಧೋರಣೆ ತಾಳಿ ಅದ್ಭುತ ಪ್ರತಿಮೆಗಳನ್ನು ಗಜಲ್ ಪ್ರಕಾರದಲ್ಲಿ ತಂದರು ಎಂಬುದು ಇಲ್ಲಿ ಸ್ಮರಣೀಯ. ಚೊಚ್ಚಲ ಕೃತಿಯಲ್ಲಿ ರೇಖಾ ಅವರು ಒಂದು ಸರಳ ರೇಖೆ ಎಳೆದಿದ್ದಾರೆ. ಅವರ ಬರಹ ಚೆಂದದ ರಂಗೋಲಿಯಾಗಲಿ ಎಂದು ಹಾರೈಸೋಣ. ನ.೧೪ ರಂದು ಅವರ ಮಡಿಲ ನಕ್ಷತ್ರ ಬೆಂಗಳೂರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಬಿಡುಗಡೆ ಸಹ ಆಗಿದೆ. ಕನ್ನಡದ ೨೩ ಜನ ಯುವ ಬರಹಗಾರರ ಸಾಲಿನಲ್ಲಿ ನಮ್ಮ ಜಿಲ್ಲೆಯ ರೇಖಾ ಭಟ್ ಸಹ ಸೇರಿರುವುದು ನಮಗೆ ಸಂತೋಷ ತಂದಿದೆ. ………………………………………………………………………………………………………………………….. ಪ್ರಶ್ನೆ : ಕವಿತೆಗಳನ್ನು ಯಾಕೆ ಬರೆಯುತ್ತೀರಿ ? ಉತ್ತರ : ನನ್ನೊಳಗಿನ ನನ್ನ ಹಗುರಾಗಿಸಿಕೊಳ್ಳಲು ನಾ ಕವಿತೆ ಬರೆಯುತ್ತೇನೆ ಪ್ರಶ್ನೆ : ಕವಿತೆ ಹುಟ್ಟುವ ಕ್ಷಣ ಯಾವುದು ? ಉತ್ತರ : ಆ ಕ್ಷಣವನ್ನು ಕವಿಸಮಯ ಎಂದಿದ್ದಾರೆ ಹಿರಿಯರು ಪ್ರಶ್ನೆ : ನಿಮ್ಮ ಕವಿತೆಗಳ ವಸ್ತು ಯಾವುದು ,ಈ ವರೆಗೆ  ಬರೆದ ಕವಿತೆಗಳ ದೃಷ್ಟಿಯಿಂದ ?  ಉತ್ತರ : ಅದಮ್ಯ ಸ್ಪೂರ್ತಿ, ನವಿರಾದ  ಪ್ರೀತಿ,  ಹೊರ ಭರವಸೆಗಳಿಂದ, ನೋವುಗಳ ಸರಿಸಿ , ನೆಮ್ಮದಿಯ ಅರಸಿ, ಹೊಸ ಆಶಯಗಳನ್ನು ಹೊತ್ತು, ಹೊಸಬೆಳಕಿನತ್ತ ಪಯಣ, ಪ್ರಶ್ನೆ : ಕವಿತೆಗಳಲ್ಲಿ ಬಾಲ್ಯ ಇಣುಕಿದೆಯೇ ? ಉತ್ತರ : ನಾನು ಬರೆದ ಗಜಲ್ ಗಳಲ್ಲಿ ಬಾಲ್ಯದ ಛಾಯೆ ಅಷ್ಟಾಗಿ ಇಣುಕಿಲ್ಲ. ಮಕ್ಕಳಿಗೆಂದೇ ಬರೆದ ಪದ್ಯಗಳಲ್ಲಿ ನನ್ನ ಬಾಲ್ಯದ ಅನುಭವಗಳನ್ನು ಬಿಂಬಿಸುವ ಯತ್ನ ಮಾಡಿದ್ದೇನೆ ಪ್ರಶ್ನೆ : ಕಾವ್ಯದ ಬಗ್ಗೆ ನಿಮ್ಮ ಕನಸುಗಳೇನು ? ಉತ್ತರ : ಕಾವ್ಯ ವ್ಯೆಯಕ್ತಿಕವಾಗಿ ಬಿಂಬಿಸಲ್ಪಟ್ಟು ಓದುಗನ ಮನಸ್ಸಿನಲ್ಲಿ ಬೇರೂರಿದರೂ , ಅದು ಸಮಾಜಮುಖಿಯಾಗಬೇಕು. ಕಾವ್ಯ  ಓದುಗನಲ್ಲಿ  ಹೊಸ ಚಿಂತನೆಯ ಬೀಜವನ್ನು ಬಿತ್ತಬೇಕು ಪ್ರಶ್ನೆ :  ಪ್ರಸ್ತುತ ರಾಜಕೀಯ ಸನ್ನಿವೇಶದ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು ? ಉತ್ತರ : ರಾಜಕೀಯದಲ್ಲಿ ದಕ್ಷ ನಾಯಕರು ಇರುತ್ತಾರೆ. ಅಸಮರ್ಥ ನಾಯಕರು ಇರುತ್ತಾರೆ .. ಜನನಾಯಕರು ಜನರಿಗಾಗಿ, ರಾಜ್ಯಕ್ಕಾಗಿ,ದೇಶಕ್ಕಾಗಿ ಶ್ರಮಿಸಬೇಕೆ ವಿನಹ ಸ್ವಲಾಭಕ್ಕಾಗಿ ರಾಜಕಾರಣ ಮಾಡಬಾರದು. ಪ್ರಶ್ನೆ :  ಧರ್ಮ ,ದೇವರು ವಿಷಯದಲ್ಲಿ ನಿಮ್ಮ ನಿಲುವೇನು ? ಉತ್ತರ : ಮಾನವೀಯತೆಯೇ ಧರ್ಮ.. ನಮ್ಮೊಳಗಿನ ಪ್ರೀತಿ, ಕರುಣೆ, ಮಮತೆಗಳೇ ದೇವರು.. ಪ್ರಶ್ನೆ :  ಪ್ರಸ್ತುತ ಸಾಂಸ್ಕೃತಿಕ ವಾತಾವರಣದ ಬಗ್ಗೆ ನಿಮಗೆ ಏನನ್ನಿಸುತ್ತಿದೆ ? ಉತ್ತರ : ಸಾಂಸ್ಕೃತಿಕವಾಗಿ ಬೆಳೆಯಲು ಬೆರೆಯಲು ಈಗ ಸಾಕಷ್ಟು ವಿಪುಲ ಅವಕಾಶಗಳಿವೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಸ್ಕೃತಿಯನ್ನು ಎತ್ತಿ ಹಿಡಿದು ನಮ್ಮ ಮೂಲ ಪರಂಪರೆಗಳನ್ನು ಮುನ್ನೆಡಸಬೇಕು… ಪ್ರಶ್ನೆ :  ಸಾಹಿತ್ಯ ವಲಯದ ರಾಜಕಾರಣದ ಬಗ್ಗೆ ನೀವು ಹೇಗೆ ಪ್ರತಿಕ್ರಿಯಿಸುವಿರಿ? . ಉತ್ತರ : ನಾನಿನ್ನು ಸಾಹಿತ್ಯ ಕ್ಷೇತ್ರದಲ್ಲಿ ಎಳಸು ಎಂಬ ಭಾವ ನನ್ನದು. ಬರೆಹ ನನಗೆ ಮತ್ತು ಓದುಗರಿಗೆ ಸಮಾಧಾನ ನೀಡಿದರೆ ಸಾಕಲ್ಲವೇ…  ಹಿರಿಯರ ಬರೆಹಗಳನ್ನು ಆಸಕ್ತಿಯಿಂದ ಓದುತ್ತೇನೆ. ಗೌರವಿಸುತ್ತೇನೆ.  ಇಲ್ಲಿನ ರಾಜಕೀಯದಿಂದ ದೂರವೇ ಉಳಿದಿದ್ದೇನೆ..ಈಗ ತ.ರಾ.ಸು. ಅವರ ದುರ್ಗಾಸ್ತಮಾನ ಓದುತ್ತಿದ್ದೆನೆ. ಕುವೆಂಪು ಅವರ ಮಲೆಗಳಲ್ಲಿ ಮದುಮಗಳು, ಕಾನೂರು ಸುಬ್ಬಮ್ಮ ಹೆಗ್ಗಡತಿ ನನ್ನ ಮುಂದಿನ ಓದು. ಪ್ರಶ್ನೆ :  ಈ ದೇಶದ ಚಲನೆಯ ಬಗ್ಗೆ ನಿಮ್ಮ ಮನಸು ಏನು ಹೇಳುತ್ತಿದೆ? ಉತ್ತರ : ಕಾಲಕ್ಕೆ ತಕ್ಕಂತೆ ಬದಲಾಗುವುದು ಜಗದ ನಿಯಮ. ಅಂತೆಯೇ ನಮ್ಮ ದೇಶವು ಪ್ರಗತಿಯತ್ತ ಮುನ್ನೆಡೆಯುತ್ತಿದೆ. ಸಾಕಷ್ಟು ಅಭಿವೃದ್ಧಿಗಳಾಗುತ್ತಿವೆ. ಈ ಜಾತ್ಯಾತೀತ ರಾಷ್ಟ್ರದ ಒಳಬಾಂಧವ್ಯ ಇನ್ನಷ್ಟು ಗಟ್ಟಿ ಮಾಡುವ ಕೆಲಸಗಳು ಈಗಿನ ಬರೆಹಗಾರದಿಂದಲೂ ಆಗುತ್ತಿದೆ ಹಾಗೂ ಆಗಬೇಕಾಗಿದೆ.  ಪ್ರಶ್ನೆ :  ಸಾಹಿತ್ಯದ  ಬಗ್ಗೆ ನಿಮ್ಮ ಕನಸುಗಳೇನು ? ಉತ್ತರ : ನಾನೂ ಮೊದಲು ಸಾಕಷ್ಟು ಓದಬೇಕಿದೆ .. ಸಾಹಿತ್ಯವೆಂಬ ಸಾಗರದ ಗುಟುಕು ಕುಡಿದು, ನಂತರ ಹೊಸಹೊಸ ಬೀಜಗಳನ್ನು ಬಿತ್ತನೆ ಮಾಡಿ, ಸಾಹಿತ್ಯ ಕೃಷಿಯನ್ನು ಶ್ರೀಮಂತಗೊಳಿಸುವ ಕನಸು ನನ್ನದು.. ನನ್ನ ಶಾಲೆಯ ಮಕ್ಕಳಲ್ಲೂ ಸಾಹಿತ್ಯ ಪ್ರೀತಿ ಹೆಚ್ಚಿಸಿ, ಕನ್ನಡ ಸಾಹಿತ್ಯದೆಡೆಗೆ ಅವರಲ್ಲಿ ಒಲವು ಮೂಡಿಸುವ ಹಂಬಲವಿದೆ. ಪ್ರಶ್ನೆ : ಕನ್ನಡ ಸಾಹಿತ್ಯದಲ್ಲಿ ನಿಮ್ಮ ಇಷ್ಟದ ಹಾಗೂ ಕಾಡಿದ ಕವಿ ಯಾರು ? ಉತ್ತರ : ದ.ರಾ. ಬೇಂದ್ರೆ. ಹಾಗೂ ಎಚ್ ಎಸ್,ವೆಂಕಟೇಶ ಮೂರ್ತಿಯವರ ಭಾವಗೀತೆಗಳು. ………

ಮುಖಾಮುಖಿ Read Post »

ಕಾವ್ಯಯಾನ

ರಾಧಾ ಕೃಷ್ಣ

ಕವಿತೆ ರಾಧಾ ಕೃಷ್ಣ ಲಕ್ಷ್ಮೀ ಪಾಟೀಲ್ ಕೃಷ್ಣನ ಅಷ್ಟ ಮಹಿಷಿಯರಿಗಿಂತಲೂಹದಿನಾರು ಸಾವಿರ ನೂರುಭಕ್ತಪ್ರೇಮಿಗಳಿಗಿಂತಲೂ ಆತನ ಏಕೈಕ ಜೀವರಾಧೆಯೇ ಆತನಿಗಿಷ್ಟಗಂಡಿನಂತೆ ಸ್ವಾತಂತ್ರವನ್ನು ಉಸಿರಾಡಿದಳುಪ್ರೀತಿಗೆ ಭಾಷ್ಯ ಬರೆದಂತೆ ಬದುಕಿದಳು ಅಷ್ಟ ಮಹಿಷಿಯರು ಹದಿನಾರು ಸಾವಿರ ನೂರುಭಕ್ತ ಹೆಂಗಳೆಯರೆಲ್ಲ ಕೃಷ್ಣನ ಬರುವಿಕೆಗೆಕಾದು ಸೋತು ಹಿಡಿ ಶಾಪ ಹಾಕಿ ಮಲಗುತ್ತಿದ್ದರುಕನಸಿನಲ್ಲಿ ಸುಳಿದಂತೆ ಸುಳಿದರೆ ಬರೀ ಆತದೇಹವಾಗಿ ಜಡವಾಗುತಿದ್ದ ಮುಟ್ಟಾದುದನುಹಾಡಿರೇ ನೀವೆಲ್ಲ ಸೇರಿ ಎಂದು ಗೋಗರೆದುಬೇಡಿ ಸರಕ್ಕನೆ ಸರಿಸಿ ರಾಧೆಯ ಕೂಗಿಗೆಹಾತೊರೆದು ಓಡುತ್ತಿದ್ದ ಮನಬಿಟ್ಟು ಕದಲದೆಆತ್ಮವಾಗಿ ಅರಳುತ್ತಿದ್ದ ರಾಧೆ ಕಾಯಿಸಿ ಮಜಾ ಉಡಾಯಿಸಿದಾಗಲೆಲ್ಲಪುಟಿವ ಚೆಂಡಾಗಿ ನೋಟಕ್ಕೆ ನೂರು ರಂಗಾಗಿಕೈಗೆ ಸಿಗಲಾರದ ಕನಸುಗಳಿಗೆಲ್ಲ ರೆಕ್ಕೆ ಬರಿಸಿಮುಟ್ಟಾಗದೆ ಉಳಿವ ರಾಧೆಗೆ ಜೀವ ಕಾವ್ಯದ ವೇಷ ತೊಟ್ಟ ರಾಧೆಗೊಂದು ದ್ವಾರಕೆ ಕಟ್ಟಿಪ್ರೀತಿಸುವ ಜೀವಕ್ಕೆ ಅರ್ಪಿತಗೊಂಡರಾಧಾ ಕೃಷ್ಣನಾಗಿ ಲೋಕಾರ್ಪಣಗೊಂಡ ಪ್ರೀತಿ ರೂಪದ ಮಾದರಿ ನೀ ಮುಕುಂದಯುಗಾಂತರಿಸು ಸುರಿಸು ಪ್ರೀತಿ ಸಿಂಚನಯುಗ ಭಾರವನಿಳಿಸಿ ತಣಿಸು ಉದ್ಧರಿಸುಹಂಚು ವಿಶ್ವರೂಪ ಜೀವಕುಲಕೆಲ್ಲ ಸ್ನೇಹಸಿಂಚನಗೋಪಿ ರಾಧೆಯರಿಗೊಂದಿಷ್ಟು ಪ್ರೇಮ ಕಂಪಣ *********************

ರಾಧಾ ಕೃಷ್ಣ Read Post »

ಕಾವ್ಯಯಾನ

ದೇವರು

ಕವಿತೆ ದೇವರು ಮಾಲತಿ ಶಶಿಧರ್ ನಿನ್ನ ಮೆಚ್ಚಿಸಲೇಬೇಕೆಂಬಇರಾದೆಯೇನಿಲ್ಲ ಹುಡುಗ,ಸೊಡರ ಹೊತ್ತಿಸುವುದುದೇವರ ಮೆಚ್ಚಿಸುವುದಕ್ಕಲ್ಲಮನವ ಒಪ್ಪಿಸಲು… ನಿನ್ನ ಒಲಿಸಿಕೊಳ್ಳಲೇಬೇಕೆಂಬಹಠವೇನಿಲ್ಲ ಹುಡುಗ,ಹೂವ ಅರ್ಪಿಸುವುದುದೇವರ ಒಲಿಸಲಲ್ಲಭಕ್ತಿ ತೋರಿಸಲು… ನಿನ್ನ ಪಡೆಯಲೇಬೇಕೆಂಬಸಂಕಲ್ಪವೇನಿಲ್ಲ ಹುಡುಗ,ನೈವೇದ್ಯೆ ಕೊಡುವುದುದೇವರು ಪ್ರತ್ಯಕ್ಷವಾಗಲಿ ಎಂದಲ್ಲಪ್ರೀತಿ ಸಮರ್ಪಿಸಲು… ನಿನ್ನ ಮೆಚ್ಚಿಸಿ, ಒಲಿಸಿ, ಪಡೆದುಬಿಟ್ಟರೆಎಲ್ಲರಂತೆ ಕೇವಲಮನುಜನಾಗಿಬಿಡುವೆ,ನೀನೆಂದಿಗೂ ಮನದ ಗುಡಿಯೊಳಗೆನೆಲೆಸಿರುವ ನನ್ನ ದೇವರಾಗೆ ಉಳಿದುಬಿಡು **********************

ದೇವರು Read Post »

ಕಾವ್ಯಯಾನ

ಕವಿತೆ

ನೀನಿರಬೇಕು ಎಚ್. ಕೆ. ನಟರಾಜ ಇಳಿಸಂಜೆ ನಾನು ಮುಳುಗುವ ಸೂರ್ಯ..ನೀನೋ ರಾತ್ರೀ ಪ್ರೀತಿಸುವ ಆಗಸದ ಚಂದ್ರಮ.ಆದರೂ ಸೂರ್ಯ ಬೆಳಗುತ್ತಲೇಇರುತ್ತಾನೆ..ಚಂದ್ರ ನೀರಂತರ..ಮುದ ಕೊಡುತ್ತಿರುತ್ತಾನೆ.ನಿನ್ನಂತೆ ನಿನ್ನ ನಗುವಿನಂತೆಈ ಕತ್ತಲೆ ಬೆಳದಿಂಗಳಾಟದ ಗೊಂಬೆ ನಾನು.ಕತ್ತಲೆಯ ನಿಶೆತುಂಬಿದ ಮರುಳಹಗಲಿನಲ್ಲಿ ಬದುಕಿನ ಬಯಲಾಟದಪಾತ್ರವಾದರೂ ಆರ್ಭಟಿಸುವುದು ಇರುಳ ಬೆಳಕಿನಾಟದಲೆ..ಒಡ್ಡೋಲಗ ಪ್ರಭುಗಳು.ನೀನೆಂದರೆ ನೀನೇ ಒಡಲಾಳದ ಕರುಣೆಉಕ್ಕಿ ಬರಲು ಒಲುಮೆಯ ಚಿಲುಮೆ ಕನಸುಕಂಗಳಿಗೆ ಕಾರಿರುಳ ರಾತ್ರಿಯಲಿದೀಪ ದೀವಿಗೆಯಾಗಿ ಕಾಡುವ ನಿನನಗುವಿನಂದದಿ..ಮಲ್ಲಿಗೆ ಚಫ್ಪರಕಟ್ಟುವ ಬಯಕೆಯ ತಿರುಕ ನಾನು..ಪ್ರೇಮತಪೋವನದ ಸಂತನೂ ನಾನುನಕ್ಕು ಬಿಡೆ ಒಮ್ಮೆ.. ಕೇಕೇ ಹಾಕಿ.. ಹಸಿಇನಾಳಕೆ ಇಳಿಯಲೀ ಭೀಬತ್ಸ.. ಚಂದ್ರ ನಗುತ್ತಾನೆಹೀಗೇಕೆ ಮಾಡಿದೆ ತರುಣೆ.. ಕೇಳುತ್ತಾನೆಕನಸುಕಂಗಳಿಗೆ ಹರಿದ ಮಬ್ಬುಕಗ್ಗತ್ತಲೆನೀನಾಗು ನನ್ನ ನಗುವಿನ ತಿಳಿನೊರೆ.. ಬೆಳ್ನೊರೆ.ಅಪ್ಪಿಬಿಡು ಮನಸಾರೆ.. ಸಂಗತಿಗಳೇನು ಘಟಿಸಿಲ್ಲವಿಲ್ಲಿ.. ಅಸಂಗತವೂಸುಸಂಗತವೋ.. ಅರಿಯುವ ತವಕದೊಳಗೆಇದ್ದವರ್ಯಾರು..?ಬೆಚ್ಚಿ ಓಡುವ ಕುದುರೆ ಹಿಡಿದವರ್ಯಾರು..ಬಂದು ಬಿಡೆ ನನ ಮನದೊಳಗೆ ನುಗ್ಗಿಬಿಡೆತಡೆಯುವರ್ಯಾರು.. ನನ್ನ ಪದನುಡಿಯಪ್ರೀತಿಥೇರಿಗೆ ಅಡ್ಡ ನಿಲ್ಲುವರಾರು…??!! ಇರಬೇಕು ನೀನು.. ನಕ್ಷತ್ರಗಳ ನಗುವಾಗಿ..ಹೊಳಪಾಗಿ ಇಳಿಸಂಜೆ ಸೂರ್ಯನ ಹೊನಲಾಗೀ. .ಚಂದ್ರನ ತಂಪಾಗಿ.. ನನ್ನೊಲವ ಇಂಪಾಗಿ.. ಕಾವ್ಯಕನ್ನಿಕೆಯಾಗಿ ಏದೆಯಾಳದಿ ಸೊಂಪಾಗಿಕೊರಳ ಹಾಡಿನ ಪದವಾಗಿ.. ಕಿವಿ ತಣಿಸೋ ಮಾಧುರ್ಯವಾಗಿ.. ನನ್ನ ಪ್ರೀತಿಯರಮನೆಯ ಅರಸಿಯಾಗಿ.. ಇರಬೇಕು ನೀನು..ನನ್ನೊಲವ ಸಿರಿಯಾಗಿ ಬಿಸಿ ಬಯಕೆಯಉಸಿರಾಗಿ.. **********************

ಕವಿತೆ Read Post »

ಅನುವಾದ

ಅನುವಾದ ಸಂಗಾತಿ

ಕವಿತೆ ಧ್ಯಾನ ಕನ್ನಡಮೂಲ: ಸುನೀತಾ ಕುಶಾಲನಗರ ಇಂಗ್ಲೀಷಿಗೆ:ಸಮತಾ ಆರ್. ಧ್ಯಾನ ಎಲ್ಲೆಡೆ ಗವ್ ಎನ್ನುವಾಗಲೂಅದೇನೋ ಧ್ಯಾನಮನೆಯೊಳಗಿದ್ದರೂ ನುಗ್ಗಿಬರುವ ಕವಿತೆ ಆಕಾಶದಂತೆ ಆವರಿಸಿನಿತ್ಯ ಬೆಳದಿಂಗಳುಋತುಚಕ್ರ ಉರುಳಿದಂತೆಋತುಸ್ರಾವ ವ್ಯತ್ಯಾಸಬಣ್ಣದ ಕನಸುಗಳಿಗೆಅದೆಷ್ಟು ಕೂಸುಗಳ ಕೇಕೆಜತೆಯಾದ ಕ್ಷಣ ಕ್ಷಣವೂಕಣ ಕಣಕೂ ಹಿತಮತ್ತೊಮ್ಮೆ ಬದುಕಿಬಿಡೆಂದುಚಾಚುವ ಕೈಕಣ್ಣ ಸುತ್ತಿದ ಬಳೆಯಾಕಾರದಕಪ್ಪನೂ ನೇವರಿಸುವಕೂದಲ ಬಣ್ಣದ ಲೇಪನಕೆಹೊಸ ಹೊಳಪುಭೂತ ಭವಿಷ್ಯದಹಂಗ ತೊರೆವ ವರ್ತಮಾನತೀರಾ ಖಾಸಗಿ ಬದುಕೇಆದರೂ ಸದ್ದಿಲ್ಲದೆಮುಟ್ಟುಗೋಲಾಗುವ ಮುಟ್ಟಿಗೂಹುಟ್ಟುತ್ತಿದೆ ಹೊಸಹುರುಪುದಿನ,ದಿನಾಂಕಗಳಗಡಿದಾಟಿ ಬರುವಲವಲವಿಕೆಯ ಮತ್ತು. A Musing.. ‌‌Far and wide surrounded by gloom,‌But still have some kind of musing.‌A poem is invading even inside the home,‌Day to day covering like a moonlit sky. ‌‌Like babies giggling in‌Their rainbow dreams‌Drowning in pleasure bit by bit.‌In every intimate moment. ‌‌A held out hand is making me alive again.‌Even the coloured hair caressing‌The dark circles of eyes‌Is gleaming with new light. ‌‌As the seasons turnSo the periods change,‌The present is though‌Too personal of a life,Is careless of future and past, Silently forfeited monthly cycleIs giving birth to a new spirit.A vigorous spree is crossingAll the borders ofTime and space… *********************

ಅನುವಾದ ಸಂಗಾತಿ Read Post »

ಇತರೆ

ಕವಿತೆ

ಹಿರಿಯ ಕವಿಗಳ ಹಳೆಯ ಕವಿತೆಗಳು ಹೊಸ ಪೀಳಿಗೆಯ ಓದುಗರಿಗಾಗಿಹಿರಿಯಕವಿಗಳಕವಿತೆಯೊಂದನ್ನು ನಿತ್ಯ ನೀಡಲಾಗುವುದು ಅವ್ವ ನನ್ನವ್ವ ಫಲವತ್ತಾದ ಕಪ್ಪು ನೆಲಅಲ್ಲಿ ಹಸಿರು ಪತ್ರದ ಹರವು, ಬಿಳಿಯ ಹೂ ಹಬ್ಬ;ಸುಟ್ಟಷ್ಟು ಕಸುವು, ನೊಂದಷ್ಟು ಹೂ ಹಣ್ಣುಮಕ್ಕಳೊದ್ದರೆ ಅವಳ ಅಂಗಾಂಗ ಪುಲಕ;ಹೊತ್ತ ಬುಟ್ಟಿಯ ಇಟ್ಟು ನರಳಿ ಎವೆ ಮುಚ್ಚಿದಳು ತೆರೆಯದಂತೆ. ಪಲ್ಲ ಜೋಳವ ಎತ್ತಿ ಅಪ್ಪನ್ನ ಮೆಚ್ಚಿಸಿ ತೋಳಬಂದಿಯ ಗೆದ್ದು,ಹೆಂಟೆಗೊಂದು ಮೊಗೆ ನೀರು ಹಿಗ್ಗಿ;ಮೆಣಸು, ಅವರೆ, ಜೋಳ, ತೊಗರಿಯ ಹೊಲವ ಕೈಯಲ್ಲಿ ಉತ್ತು,ಹೂವಲ್ಲಿ ಹೂವಾಗಿ ಕಾಯಲ್ಲಿ ಕಾಯಾಗಿಹೆಸರು ಗದ್ದೆಯ ನೋಡಿಕೊಂಡು,ಯೌವನವ ಕಳೆದವಳು ಚಿಂದಿಯ ಸೀರೆ ಉಟ್ಟುಕೊಂಡು. ಸತ್ತಳು ಈಕೆ:ಬಾಗು ಬೆನ್ನಿನ ಮುದುಕಿಗೆಷ್ಟು ಪ್ರಾಯ?ಎಷ್ಟುಗಾದಿಯ ಚಂದ್ರ, ಒಲೆಯೆದುರು ಹೋಳಿಗೆಯ ಸಂಭ್ರಮ?ಎಷ್ಟೋ ಸಲ ಈ ಮುದುಕಿ ಅತ್ತಳುಕಾಸಿಗೆ, ಕೆಟ್ಟ ಪೈರಿಗೆ, ಸತ್ತ ಕರುವಿಗೆ;ಎಷ್ಟುಸಲ ಹುಡುಕುತ್ತ ಊರೂರು ಅಲೆದಳುತಪ್ಪಿಸಿಕೊಂಡ ಮುದಿಯ ಎಮ್ಮೆಗೆ? ಸತಿ ಸಾವಿತ್ರಿ, ಜಾನಕಿ, ಉರ್ಮಿಳೆಯಲ್ಲ;ಚರಿತ್ರೆ ಪುಸ್ತಕದ ಶಾಂತ, ಶ್ವೇತ, ಗಂಭೀರೆಯಲ್ಲ;ಗಾಂಧೀಜಿ, ರಾಮಕೃಷ್ಣರ ಸತಿಯರಂತಲ್ಲ;ದೇವರ ಪೂಜಿಸಲಿಲ್ಲ; ಹರಿಕತೆ ಕೇಳಲಿಲ್ಲ;ಮುತ್ತೈದೆಯಾಗಿ ಕುಂಕುಮ ಕೂಡ ಇಡಲಿಲ್ಲ. ಬನದ ಕರಡಿಯ ಹಾಗೆಚಿಕ್ಕಮಕ್ಕಳ ಹೊತ್ತುಗಂಡನ್ನ ಸಾಕಿದಳು ಕಾಸು ಗಂಟಿಕ್ಕಿದಳು.ನೊಂದ ನಾಯಿಯ ಹಾಗೆ ಬೈದು ಗೊಣಗಿ, ಗುದ್ದಾಡಿದಳು;ಸಣ್ಣತನ, ಕೊಂಕು, ಕೆರೆದಾಟ ಕೋತಿಯ ಹಾಗೆ:ಎಲ್ಲಕ್ಕೆ ಮನೆತನದ ಉದ್ಧಾರ ಸೂತ್ರ.ಈಕೆ ಉರಿದೆದ್ದಾಳುಮಗ ಕೆಟ್ಟರೆ. ಗಂಡ ಬೇರೆ ಕಡೆ ಹೋದಾಗ ಮಾತ್ರ. ಬನದ ಕರಡಿಗೆ ನಿಮ್ಮ ಭಗವದ್ಗೀತೆ ಬೇಡ;ನನ್ನವ್ವ ಬದುಕಿದ್ದುಕಾಳುಕಡ್ಡಿಗೆ, ದುಡಿತಕ್ಕೆ, ಮಕ್ಕಳಿಗೆ;ಮೇಲೊಂದು ಸೂರು, ಅನ್ನ, ರೊಟ್ಟಿ, ಹಚಡಕ್ಕೆ;ಸರೀಕರ ಎದುರು ತಲೆಯೆತ್ತಿ ನಡೆಯಲಿಕ್ಕೆ, ಇವಳಿಗೆ ಮೆಚ್ಚುಗೆ, ಕೃತಜ್ಞತೆಯ ಕಣ್ಣೀರು;ಹೆತ್ತದ್ದಕ್ಕೆ, ಸಾಕಿದ್ದಕ್ಕೆ; ಮಣ್ಣಲ್ಲಿ ಬದುಕಿ,ಮನೆಯಿಂದ ಹೊಲಕ್ಕೆ ಹೋದಂತೆತಣ್ಣಗೆ ಮಾತಾಡುತ್ತಲೇ ಹೊರಟುಹೋದದ್ದಕ್ಕೆ ********************************* ಪಿ.ಲಂಕೇಶ್

ಕವಿತೆ Read Post »

ಕಾವ್ಯಯಾನ

ಕವಿತೆ

ಕವಿತೆ ಹಾಳೆ ತಿರುವಿದರೆ ಅಧ್ಯಾಯ ಮುಗಿಯದುಧರ್ಮಸ್ಥಾಪನೆಗೆ ಮತ್ತೆ ಮತ್ತೆ ಬರುತ್ತೇನೆಂದವಹೇಳಿದ್ದೂ ಅದನ್ನೇಎಲ್ಲವೂ ಮುಗಿಯದ ಅಧ್ಯಾಯ ದಾರಿಗಳು ಎಂದೋ ಕವಲೊಡೆದವುಎಲ್ಲ ಮರೆತಂತೆ ಹೆಜ್ಜೆಗಳೂ ನಡೆದವುಉಸಿರು ಭಾರದ ಜೋಕಾಲಿಜೀಕಿದಷ್ಟೂ ಎಳೆದಾಡುತ್ತಿತ್ತು ಕಟಕಟೆಯ ತೀರ್ಪಿನಲ್ಲಿಇವರು ಬೇರೆ ಬೇರೆಉಳಿಯುವುದು ಏನಿದ್ದರೂ ಲೆಕ್ಕಾಚಾರಉತ್ತರ ಹುಡುಕುವ ಪುಟ್ಟ ಕಂಗಳಲ್ಲಿಪ್ರಶ್ನೆಗಳ ಮಹಾಪೂರ ಹಾಳೆಗಳೂ ನಾಳೆಗಳಂತೆಕರೆದಷ್ಟೂ ತೆರೆಯುತ್ತವೆಚುಕ್ಕೆಯಿಡುವ ಮುನ್ನ ಅಲ್ಪವಿರಾಮಮುಗಿಸಲು ಮನಸ್ಸಿಲ್ಲಹೇಗೆಂದರೂಇದು ಮುಗಿಯದ ಅಧ್ಯಾಯ.

ಕವಿತೆ Read Post »

You cannot copy content of this page

Scroll to Top