ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕುದಿವೆಸರ ಅಗುಳಾಗಬೇಕು

ಕವಿತೆ ಪ್ರೇಮಾ ಟಿ ಎಮ್ ಆರ್ ತನ್ನ ಹೀಗಿಟ್ಟವರನ್ನೆಲ್ಲಶಾಪ ಹಾಕಬೇಕೆಂದುಕೊಂಡಿದ್ದುಅದೆಷ್ಟುಬಾರಿಯೋತನಗಿಷ್ಟಬಂದಂತೆಇರಬಹುದಾಗಿದ್ದರೂಅವರಿಟ್ಟ ಪಾತ್ರೆಯೊಳಗೇತುಂಬಿಕೊಂಡಂತೆಬದುಕಿದ್ದು ತನ್ನದೂತಪ್ಪಲ್ಲವಾ?ಮತ್ತೆ ಈ ಮನೆಅಪ್ಪ ಅಮ್ಮ ಅತ್ತೆಮಾವಈ ಮಗಳ ಅಪ್ಪಎಲ್ಲರೂ ತನ್ನವರಲ್ಲವೇಎಂದುಕೊಳ್ಳುತ್ತಲೇಅವಳು ಅವಳಂತಿರದೇಅಮ್ಮನಂತೆ ಅಕ್ಕನಂತೆಬದುಕ ಬದುಕುತ್ತಲೇಇದ್ದಾಳೆ ಎಗರಿಬೀಳಬೇಕಾದಲ್ಲೆಲ್ಲತಣ್ಣೆ ಅಂಬಲಿಯಂತೆಹಳ್ಳೆಣ್ಣೆಯಂತೆಹಂದಾಡುತ್ತಾಳೆ ಮಂದಮಂದವಾಗಿಮನೆಮುಂದೆ ಬಿದ್ದುಕೊಂಡಪೆದ್ದಮುಂಡೆಯಂಥಕಾಲ್ದಾರಿಯೇ ತಾನೆಂದುಕೊಂಡಿದ್ದುಅದೆಷ್ಟು ಬಾರಿಯೋಉಗುಳಿ ಉಚ್ಚೆ ಹೊಯ್ದರೂಹೊದ್ದು ಮಲಗಿಕೊಂಡ ಬೀದಿ ತಡೆಯಲಾರದೇ ಗುಡಗುಡಿಸಿದ್ದೂಇದೆಯಾದರೂ ಮತ್ತೆಪಶ್ಚಾತ್ತಾಪದ ಉರಿಯೂಅವಳ ಉಡಿಗೇಕುದಿವೆಸರೊಳಗಿನ ಅಗುಳಾಗಿಮುಚ್ಚಳ ಕೊಡವಿ ಉಕ್ಕಬೇಕುಸಿಡಿಯಬೇಕು ಬಿಡಿಯಾಗಿ ಹಿಡಿಯಾಗಿಒಟ್ಟಿದ ಒಲೆ ಆರುವ ತನಕಹುದುಗದೇ ಬುದುಗಬೇಕುಒಮ್ಮೆಗಾದರೂ ಅಂದುಕೊಳ್ಳುತ್ತಾಳೆ

ಕುದಿವೆಸರ ಅಗುಳಾಗಬೇಕು Read Post »

ಕವಿತೆ ಕಾರ್ನರ್

ರಣ ಹಸಿವಿನಿಂದ!

ಕವಿತೆ ಮೊನ್ನೆ ಇವರೂಹಲವು ಯುದ್ದಗಳ ಗೆದ್ದಿದ್ದರುಗೆದ್ದ ರಾಜ್ಯದ ಹೆಣ್ನುಗಳಬೇಟೆಯಾಡಿದ್ದರುಇದೀಗ ಸಾಂತ್ವಾನ ಕೇಂದ್ರಗಳತೆರೆದು ಕೂತಿದ್ದಾರೆ! ಮೊನ್ನೆ ಇವರೂಊರೂರುಗಳಿಗೆ ಬೆಂಕಿಹಚ್ಚಿದ್ದರುಉರಿದ ಮನೆಗಳಲ್ಲಿ ಹೆಂಗಸರುಮಕ್ಕಳೆನ್ನದೆ ತಲೆ ತರೆದಿದ್ದರುಇದೀಗ ಆನಾಥಾಶ್ರಮಗಳತೆರೆದು ಕೂತಿದ್ದಾರೆ! ಮೊನ್ನೆ ಇವರೂಕೋವಿ ಖಡ್ಘಗಳ ಹಿಡಿದಿದ್ದರುಇದೀಗ ಧರ್ಮಗ್ರಂಥಗಳಪಾರಾಯಣ ಮಾಡುತ್ತಿದ್ದಾರೆ! ಮೊನ್ನೆಮೊನ್ನೆಯವರೆಗೂ ನಡೆದಅಕಾರಣ ಯುದ್ದಗಳಿಗೀಗಸಕಾರಣಗಳ ಪಟ್ಟಿಮಾಡುತ್ತ ಕೂತಿದ್ದಾರೆ ತರಿದ ತಲೆಗಳಭೋಗಿಸಿದ ಯೋನಿಗಳಕಚ್ಚಿದ ಮೊಲೆಗಳಕಲಸಿಹಾಕಿದ ಭ್ರೂಣಗಳನಿಖರ ಅಂಕಿಅಂಶಗಳಿಗಾಗಿತಲೆ ಕೆರೆದುಕೊಳ್ಳುತ್ತಿದ್ದಾರೆ ಪ್ರತಿ ಮನುಷ್ಯನಿಗೂ ಇರಬಹುದಾದಮೃಗದ ಮುಖವಾಡವಕಳಚಲೆತ್ನಿಸಿದಷ್ಟೂಗೊಂದಲವಾಗುವುದು ಖಚಿತ ನೋಡು ಬರೆಯುವಾಗಲೂ ಇದನುಕೆಕ್ಕರಿಸಿ ನೋಡುತಿದೆ ಮೃಗವೊಂದುರಣಹಸಿವಿನಿಂದ!————————————– ಕು.ಸ.ಮದುಸೂದನ ರಂಗೇನಹಳ್ಳಿ(ದುರಿತಕಾಲದ ದನಿ)

ರಣ ಹಸಿವಿನಿಂದ! Read Post »

ಇತರೆ

ಆಕಾಶಯಾನವೂ ಆಧ್ಯಾತ್ಮಿಕ ಚಿಂತನೆಯೂ

ಲೇಖನ ಚಂದಕಚರ್ಲ ರಮೇಶ ಬಾಬು ತಲೆಬರಹ ನೋಡಿಯೇ ಇದೇನಪ್ಪ ಇವನು ಯಾವುದನ್ನ ಯಾವುದಕ್ಕೋ ಜೋಡಿಸ ತೊಡಗಿದ್ದಾನೆ ಎನ್ನುತ್ತೀರಾ ! ಕರ್ಮಸಿದ್ಧಾಂತಕ್ಕೂ ನಾವು ಕೈಗೊಳ್ಳುವ ವಿಮಾನಯಾನಕ್ಕೂ ಎಲ್ಲಿಯ ಸಾಪತ್ಯ ವೆನ್ನುತ್ತೀರಾ !. ಏನೋ ಹೇಳಲು ಹೋಗಿ ಏನೋ ಹೇಳ್ತಿದೀನಿ ಅಂತ ಅನ್ನಿಸ್ತಿದೆಯಾ ? ಅದೇನೂ ಅಲ್ಲ. ನಾನು ನಿಮಗೆ ಅನುಭವಗಳ ದೃಷ್ಟಾಂತಗಳನ್ನು ಕೊಡುತ್ತಾ ಹೋದಾಗ ನೀವೇ ಒಪ್ತೀರಾ ! ಆದ್ರೆ ಒಂದು. ಇದು ಹೊಂದೋದು ವಿದೇಶೀ ವಿಮಾನಯಾನಕ್ಕೆ ಮಾತ್ರ.  ಈಗ ನಾವು ಇದರ ಚರ್ಚೆಗೆ ಬರೋಣ. ನೀವು ನಮ್ಮ ದೇಶದ ಯಾವುದೋ ವಿಮಾನ ನಿಲ್ದಾಣದಿಂದ ವಿದೇಶೀಯಾನಕ್ಕೆ ತಯಾರಾಗಿದ್ದೀರಿ. ನಿಮ್ಮನ್ನ ಬೀಳ್ಕೊಡಲು ನಿಮ್ಮವರೆಲ್ಲಾ ಬಂದಿದ್ದಾರೆ. ನಿಮ್ಮನ್ನ ಅಪ್ಪಿಕೊಂಡು ಕನ್ನಡದಲ್ಲೋ ಇಂಗ್ಲೀಷಿನಲ್ಲೋ ಶುಭಯಾತ್ರೆ ಹೇಳುತ್ತಾರೆ. ನೀವು ಒಳಗಡೆಗೆ ಸಾಗುತ್ತೀರಿ ಕೈಬೀಸುತ್ತಾ. ಅವರು ಅಲ್ಲೇನಿಲ್ಲುತ್ತಾರೆ. ಕ್ರಮೇಣ ಅವರು ಕಣ್ಮರೆಯಾಗುತ್ತಾರೆ. ಅಲ್ಲಿಂದ ಮೊದಲಾಗುತ್ತದೆ ನಿಮ್ಮ ಕರ್ಮಕಾಂಡ. ಇಲ್ಲಿಂದ ಹಿಡಿದು ನೀವು ಅದ್ಯಾವುದೋ ದೇಶದ ವಿಮಾನ ನಿಲ್ದಾಣದಲ್ಲಿ ಇಳಿದು ಹೊರಬರುವ ವರೆಗೂ ನಿಮಗಾಗುವ ಅನುಭವ ನಿಮಗೊಂದು ಹೊಸ ಜನ್ಮ ತಾಳಿ ಬಂದಂತೆ ಎಂದು ನನ್ನ ಅನಿಸಿಕೆ. ಈ ಪ್ರಯಾಣದಲ್ಲಿ ನಿಮಗೆ ಸಿಗುವ ಅನುಭವಗಳು ನೀವು ಮಾಡಿದ ಪಾಪ ಪುಣ್ಯಗಳ ಮೇಲೆ ಅಂದರೇ ಕರ್ಮ ಸಿದ್ಧಾಂತದ ಮೇಲೆ ಅವಲಂಬಿಸಿರುತ್ತವೆ ಎಂದು ನನ್ನ ಭಾವನೆ. ಮುಂಚೆ ನಾವೆಲ್ಲಾ ವಿಮಾನಯಾತ್ರೆ ಮಾಡುತ್ತೇವೆಂದು ಎಣಿಸಿದವರಲ್ಲ. ನಮ್ಮ ಚಿಕ್ಕಂದಿನ ದಿನಗಳಲ್ಲಿ ( ನಾನೀಗ ೬೬ ವರ್ಷದವ ) ಮೇಲೆ ಹಾರುತ್ತಿದ್ದ ವಿಮಾನವನ್ನು ತಲೆ ಎತ್ತಿ  ನೋಡುತ್ತಾ ಕೈ ಬೀಸುವುದೊಂದೇ ನಮಗೆ ಗೊತ್ತಿತ್ತು. ನಾವು ಬೀಸುವ ಆ ಕೈ ಅಲ್ಲಿಯವರಿಗೆ ಕಾಣುವುದಿಲ್ಲ ಅಂತ ಸಹ ನಮಗೆ ಆಗ ತಿಳಿದಿರಲಿಲ್ಲ. ಕೆಲಸಕ್ಕೆ ಸೇರಿ ಪದವಿಗಳಲ್ಲಿ ಮೇಲೇರಿ ಒಂದು ಹಂತ ತಲುಪಿದಾಗ ಕಚೇರಿಯ ವತಿಯಿಂದ ವಿಮಾನಯಾನದ ಸವಲತ್ತು ದೊರೆಯಿತು. ಎಷ್ಟೋ ಸರ್ತಿ ನಾನಿರುವ ಹೈದರಾಬಾದಿನಿಂದ  ಬೆಂಗಳೂರು, ಚೆನ್ನೈ, ಮುಂಬೈ, ಕಲಕತ್ತಾ, ಭುವನೇಶ್ವರ್, ದಿಲ್ಲಿ ಮುಂತಾದ ಊರುಗಳಿಗೆ ವಿಮಾನಗಳಲ್ಲಿ ಹೋದದ್ದು ಇದೆ. ಅಲ್ಲೂ ಸಹ ಮೊದಲ ಸಲ ಪ್ರಯಾಣ ಮಾಡುವಾಗ ಕೆಲ ಅನುಭವಗಳಾಗಿದ್ದರೂ ಅವ್ಯಾವೂ ಮೆಲಕು ಹಾಕುವಂಥವುಗಳಾಗಿರಲಿಲ್ಲ. ಮತ್ತೂ ಈ ಥರದ ವೇದಂತ ಧೋರಣಿಯನ್ನು ಅವಲಂಬಿಸುವಷ್ಟು ತೀಕ್ಷ್ಣವಾಗಿರಲಿಲ್ಲ. ನನ್ನ ಮಗಳ ಮದುವೆ ಅಮೆರಿಕಾ ಹುಡುಗನೊಂದಿಗೆ ಆದಾಗ ಮಾತ್ರ ನಮ್ಮ ಅಮೆರಿಕಾ ಪ್ರವಾಸ ಕರಾರು ಆದಂತಿತ್ತು.  ಹೊರಡಬೇಕೆಂದು ನಿರ್ಧಾರವಾದಾಗ ವೀಸಾ ಅನುಮತಿ ಪಡೆಯಲು ಮಾಡಬೇಕಾದ ಪದ್ಧತಿಗಳ ಬಗ್ಗೆ ನನ್ನ ಮಗಳು ಮತ್ತು ಅಳಿಯ ತುಂಬಾ ಶ್ರದ್ಧೆ ವಹಿಸಿ ಅದಕ್ಕೆ ಬೇಕಾದ ಕ್ರಮದ ಬಗ್ಗೆ ನಮಗೆ ತಿಳಿಸಿ ಹೇಳಿದರು.  ನಮಗೆ ಆ ಪ್ರಶ್ನೋತ್ತರದ ತರಬೇತಿ ನೋಡಿಯೇ ಒಂಥರಾ ಕಳವಳ ಪ್ರಾರಂಭವಾಗಿತ್ತು. ಒಳ್ಳೆ ಪರೀಕ್ಷೆಗೆ ತಯಾರಿ ನಡೆಸಿದ ಹಾಗೆ ನಡೆದಿತ್ತು. ನಡುವಿನಲ್ಲಿ ನನ್ನ ಮಗಳ ಅಣಕು ಸಂದರ್ಶನ ಸಹ ನಡೆದಿತ್ತು.   ವೀಸಾ ಕಚೇರಿಯಲ್ಲಿ ನಡೆದ ಸಂದರ್ಶನದಲ್ಲಿ ಅಲ್ಲಲಿ ಸ್ವಲ್ಪ ತಡವರಿಸಿದರೂ ಮೊದಲನೇ ಸಂದರ್ಶನದಲ್ಲೇ ವೀಸಾ  ಪಡೆಯಲು ಯಶಸ್ವಿಯಾದೆವು. ಅಲ್ಲಿಂದ ಪ್ರಾರಂಭವಾಯಿತು ನಮ್ಮ ಪ್ರಯಾಣದ ಸಿದ್ದತೆ. ನಾವು ಕೊಂಡೊಯ್ಯಬೇಕಾದ ನಾಲ್ಕು ಪೆಟ್ಟಿಗೆಗಳ ಸರಿಯಾದ ಅಳತೆ, ಅವುಗಳ ಒಂದೊಂದರ ಭಾರ, ತೆಗೆದುಕೊಂಡು ಹೋಗಬೇಕಾದ ವಸ್ತುಗಳ ಪಟ್ಟಿ, ಮತ್ತೆ ಅಮೆರಿಕಾಗೆ ತರಬಾರದ ವಸ್ತುಗಳ ಬಗ್ಗೆ ನಮಗೆ ತಿಳಿಹೇಳುತ್ತಾ ಮಗಳು ಅಳಿಯ ನಮಗೆ  ಮನದಟ್ಟು ಮಾಡಿಸಿದರು. ನಾವು ಸಹ ಅಂತರ್ಜಾಲದಲ್ಲಿ ಹುಡುಕಿ, ನಿಷಿದ್ಧವಾದ ವಸ್ತುಗಳನ್ನ ಬಿಟ್ಟು ಉಳಿದದ್ದನ್ನೇ ಕಟ್ಟಿಕೊಂಡೆವು, ಅಥವಾ ಹಾಗೆ ಅಂದುಕೊಂಡೆವು. ಎರಡೆರಡು ಸರ್ತಿ ಸರಿ ನೋಡಿಕೊಂಡು ಸಿದ್ದರಾದೆವು. ಅವರ ಮಾರ್ಗದರ್ಶನದಲ್ಲಿ ಏನೂ ಸಮಸ್ಯೆ ಬರಲಿಕ್ಕಿಲ್ಲ ಎಂದು ಮುಂದುವರೆಸಿದೆವು. ನಾವು ಹೈದರಾಬಾದಿನಿಂದ ಹೊರಟು ದುಬೈನಲ್ಲಿ ವಿಮಾನ ಬದಲಿಸಬೇಕಿತ್ತು.  ಹೈದರಾಬಾದ್ ನಲ್ಲಿ ಮತ್ತೆ ದುಬೈನಲ್ಲಿ ಯಾವುದೇ ತರದ ಅಡಚಣೆಯಾಗಲಿಲ್ಲ. ದುಬೈನಲ್ಲಿ ನಮ್ಮ ಗೇಟ್ ಹುಡುಕಲು ತುಂಬಾ ತಡವಾಗಿ ಏನೂ ತಿನ್ನದೇ ವಿಮಾನದೊಳಗೆ ಹಸಗೊಂಡು ಕೂತು ಅವರು ಯಾವಾಗ ತಿನ್ನಲು ಕೊಡುತ್ತಾರೋ ಎಂದು ಕಾದದ್ದು ಬಿಟ್ಟರೇ ಮತ್ಯಾವ ತೊಂದರೆಯೂ ಆಗಿರಲಿಲ್ಲ. ಸಾನ್ ಫ್ರಾನ್ಸಿಸ್ಕೋ ವಿಮಾನ ನಿಲ್ದಾಣದಲ್ಲಿ ಇಳಿದು  ಅಲ್ಲಿಯ ವಲಸೆ ಬರುವವರನ್ನು ಪ್ರಶ್ನಿಸುವ ಕಿಡಿಕಿಯಲ್ಲಿ ಮತ್ತೆ ಸ್ವಲ್ಪ ತಡವರಸಿ ಉತ್ತರಕೊಟ್ಟು ಕಿಡಿಕಿಯ ಹಿಂದಿನ ಅಧಿಕಾರಿಯ ಕೊಂಕು ನಗೆಯನ್ನು ಸಹಿಸಿ  ನಮ್ಮ ನಾಲ್ಕು ಪೆಟ್ಟಿಗೆಗಳನ್ನ ಟ್ರಾಲಿ ಮೇಲೆ ಕಷ್ಟಪಟ್ಟು ಸೇರಿಸಿ ಅವರು ಹೋಗು ಎಂದ ಕಡೆಗೆ  ಹೊರಟೆವು. ಎಲ್ಲವೂ ಸಲೀಸಾಗಿ ಸಾಗುತ್ತಿದೆ ಎನಿಸಿತ್ತು. ಅದು ಬರೀ ಭ್ರಮೆ ಎಂದು ತಿಳಿಯಲು ಹೆಚ್ಚು ಸಮಯ ಬೇಕಾಗಲಿಲ್ಲ. ನಮ್ಮ ಪೆಟ್ಟಿಗೆಗಳು ಕ್ಷಕಿರಣದ ಪರೀಕ್ಷೆಗೆ ಒಳಪಡಬೇಕೆಂದು ಬರೆಯಲಾಗಿತ್ತು. ಮೊದಲನೆ ಸಲ ಅಮೆರಿಕಾಗೆ ಬಂದ ನಮ್ಮಂತ ಹಿರಿಯರ ಪೆಟ್ಟಿಗೆಗಳು ಕಡ್ಡಾಯವಾಗಿ ತಪಾಸನೆಗೊಳಗಾಗುತ್ತವೆ ಅಂತ ನಂತರ ನನ್ನ ಮಗಳು ಹೇಳಿದಳು. ಅಮೆರಿಕದವರಿಗೆ ಭಾರತೀಯರ ಕೌಟುಂಬಿಕ ಒಲವಿನ ಬಗ್ಗೆ ತುಂಬಾ ಗುಮಾನಿಯಂತೆ. ಅದರಲ್ಲೂ ಇಲ್ಲಿಯ ತಿಂಡಿಗಳನ್ನು ತಮ್ಮ ಮಕ್ಕಳ ಸಲುವಾಗಿ ತಂದೇ ತರುತ್ತಾರೆ ಅಂತ ಅವರಿಗೆ ಖಾತರಿಯಂತೆ. ಹಾಗಾಗಿ ತಪಾಸನಾ ಮಶೀನಿಗೆ ಪೆಟ್ಟಿಗೆಗಳನ್ನ ಕಷ್ಟದಿಂದ ಟ್ರಾಲಿಯಿಂದ ಹಾಕಿ ಈಚೆ ಬಂದು ನಿಂತೆವು. ಒಂದೊದೇ ಪೆಟ್ಟಿಗೆಯನ್ನ  ತೆಗೆಯಲು ಹೇಳಿ ಅವುಗಳಳೊಗಿನ ಪದಾರ್ಥಗಳನ್ನು ತಪಾಶಿಸುತ್ತಿದ್ದರು. ನಾವು ಇಲ್ಲಿಂದ ಹೊತ್ತ ಚಟ್ನಿಪುಡಿ, ಉಪ್ಪಿನಕಾಯಿ, ಹಪ್ಪಳ, ಸಿಹಿತಿಂಡಿ ಇವುಗಳೆಲ್ಲಾ ಅವರ ಪರೀಕ್ಷೆಗೆ ಒಳಗಾದವು. ನಮಗೆ ನಮ್ಮ ಮೇಲೆ ಭರವಸೆ. ಅಂಥದ್ದೇನೂ ತಂದಿಲ್ಲವಾದ್ದರಿಂದ ಬೇಗ ಮುಗಿಯಬಹುದೆಂದು. ಕೊನೆಯಲ್ಲಿ ಒಂದು ಪ್ಲಾಸ್ಟಿಕ್ ಚೀಲವನ್ನು ಹಿಡಿದು ಬೆಕ್ಕಿನ ಮರಿಯನ್ನು ಎತ್ತುವ ಹಾಗೆ ಎತ್ತಿ, ನಮಗೆ ತೋರಿಸುತ್ತಾ “ಇದೇನಿದು “ ಎಂದರು ಇಂಗ್ಲೀಷ್ ನಲ್ಲಿ. ಅವರ ಮುಖಚರ್ಯೆ ನೋಡಿದರೇ ನಮ್ಮ ಭಾರತದವರೇ ಎನಿಸಿತು. ನಮ್ಮವರೇ ಆದಕಾರಣ ಅವರನ್ನು ಸಮಜಾಯಿಸಬಹುದು ಎಂದುಕೊಳ್ಳುತ್ತಾ “ ಇದು ಬದರೀನಾರಾಯಣನ ಪ್ರಸಾದ ಮೇಡಮ್ “ ಎಂದೆವು. ಅವರು ಇನ್ನೇನು ನಮ್ಮ ಈ ಸಮಜಾಯಿಷಿಗೆ ಒಪ್ಪೇ ಬಿಡುತ್ತಾರೆ ಎನ್ನುವ ಭರವಸೆ ನಮ್ಮದು. ಆದರೇ ಹಾಗೆ ಆಗಲಿಲ್ಲ. ಅವರು ತಮ್ಮ ಮುಖಭಾವವನ್ನ ಒಂಚೂರೂ ಬದಲಿಸದೇ “ ಸೋ ಆದರೇನಂತೆ . ಇದರಲ್ಲಿರುವುದು ಅಕ್ಕಿ ಮತ್ತು ಕಡಲೇಬೇಳೆ ತಾನೇ ? ಇದು ಅಮೆರಿಕಾಕ್ಕೆ ತರಬಾರದು ಅಂತ ನಿಮಗೆ ಗೊತ್ತಿಲ್ವಾ ?  ಹೀಗೆ ತಂದವರಿಗೆ ಮುನ್ನೂರು ಡಾಲರ್ ಜುರ್ಮಾನೆ ಬೀಳುತ್ತೆ. ಗೊತ್ತಾ ? “ ಎಂದರು. ನಾನು ಸ್ವಲ್ಪ ಅಧಿಕ ಪ್ರಸಂಗತನ ಮಾಡುತ್ತಾ “ ಮ್ಯಾಡಮ್ ! ಬೀಜಗಳು ತರಬಾರದು ಅಂತ ಬರೆದಿದ್ದಾರೆ. ಇವುಗಳು ಬೀಜ ಅಲ್ಲವಲ್ಲ. ಇವುಗಳನ್ನ ಬಿತ್ತಿದರೇ ಮೊಳಕೆ ಬರುವುದಿಲ್ಲ “ ಎಂದೆ. ಅದಕ್ಕವರು ಕೂಲಾಗಿ “ ಇಲ್ಲಿಯ ಸರಕಾರದಲ್ಲಿ ಕೆಲಸ ಮಾಡುವವರು ನೀವೋ ನಾನೋ ? ಇಲ್ಲಿಗೆ ಯಾವುದು ತರಬೇಕು ಯಾವುದು ಬೇಡ ಅಂತ ನಾನು ನಿಮ್ಮಿಂದ ತಿಳಿಯಬೇಕಿಲ್ಲ. ದಿಸೀಜ್ ನಾಟ್ ಅಲೋಡ್ “ ಎನ್ನುತ್ತಾ ಆ ಚೀಲವನ್ನ ಕಸದ ಬುಟ್ಟಿಗೆ ಹಾಕಿದರು. ನನ್ನ ಹೆಂಡತಿ “ ಅಯ್ಯೋ” ಎಂದಳು . “ಪಾಪೀ” ಎನ್ನುವ ಕೂಗು ಅವಳ ಕೊರಳಲ್ಲೇ ಹೂತುಹೋಗಿತ್ತು..  ಅವಳ ಕೈ ಅಮುಕುತ್ತಾ ಅಲ್ಲಲ್ಲಿ ಹರಡಿದ ಉಳಿದ ಸಾಮಾನನ್ನು ಮತ್ತೆ ಪೆಟ್ಟಿಗೆಗಳೊಳಗೆ ಜೋಡಿಸಿ ನಾವು ಹೊರಬಂದೆವು. ನನ್ನ ಹೆಂಡತಿಯಂತೂ  ಪ್ರಸಾದ ಕಸದ ಬುಟ್ಟಿಗೆ ಬಿದ್ದ ಶಾಕಿನಿಂದ ಹೊರಬಂದಿರಲಿಲ್ಲ. ಹೊರಗೆ ಸಿಕ್ಕ ನನ್ನ ಮಗಳು ಮತ್ತು ಅಳಿಯಂದಿರೊಡನೆ “ ನಿಮ್ಮ ಅಮೆರಿಕಾ ಏನ್ ಚೆನ್ನಾಗಿಲ್ಲ. ಅವಳ್ಯಾರೋ ನಮ್ಮದೇಶದವಳೇ ಆದ್ರೂ ಪ್ರಸಾದ ಅಂತ ಹೇಳ್ತಿದ್ರೂ ಕಸದ ಬುಟ್ಟಿಗೆ ಹಾಕಿದ್ಲು. “ ಅಂತ ಹಾರಾಡಿದ್ಲು. ಈಗ ಹೇಳಿ. ಎಲ್ಲಾ ತರ ನಾವು ತರಬೇತಿ ಪಡೆದರೂ ಸಹ ನಮಗೀ ಅನುಭವ ಬೇಕಿತ್ತೇ ? ಅದಕ್ಕೇ ನಾನು ಹೇಳಿದ್ದು. ವಿಮಾನಾಶ್ರಯದ ಒಳಗೆ ಹೊಕ್ಕಾಗಿನಿಂದ ಮತ್ತೆ ಹೊರಗೆ ಬರುವವರೆಗೆನ  ಪ್ರಯಾಣ ನಮ್ಮ ಮಾನವ ಜನ್ಮದ ತರಾ. ಮನುಷ್ಯರಾಗಿ ನಾವು ಏನೆಲ್ಲಾ ಕಷ್ಟ ಸುಖ ಅನುಭವಿಸಿರುತ್ತೇವೋ ಇಲ್ಲಿ ಸಹ ಹಾಗೇನೇ. ಏನೇನು ಅನುಭವ ಕಾದಿರುತ್ತಾವೋ ಗೊತ್ತಾಗುವುದಿಲ್ಲ. ಒಟ್ಟಾರೆ ನಮ್ಮಪುಣ್ಯ. ಅಥವಾ ಪಾಪ  ಅಂತಿಟ್ಕೊಳ್ಳಿ. ಒಂದು ಅನುಭವಕ್ಕೇ ನಾನಿಷ್ಟು ವೇದಾಂತಿಯಾಗಬೇಕಾಗಿಲ್ಲ ಅಂತ ನೀವನ್ನಬಹುದು. ಮುಂದೆ ಕೇಳಿ. ನಾವುಗಳು ಬಂದಮೇಲೆ ನಮ್ಮ ಬೀಗರು ಅಮೆರಿಕಾಕ್ಕೆ ಹೊರಟರು. ನಮ್ಮ ಅನುಭವವನ್ನೆಲ್ಲಾ ಅವರಿಗೆ ತಿಳಿಸಿ, ಅವರಿಗೆ ಟ್ರೈನಿಂಗ್ ಕೊಟ್ಟೆವು. ಅವರು ಇಂಥ ಅನುಭವಕ್ಕೆ ತಯಾರಾಗಿ ಹೋದರು. ಅವರಿಗಾದ ಅನುಭವವೇ ಬೇರೇ. ನಮಗೆ ಮೊಮ್ಮಗಳು ಹುಟ್ಟಿದ್ದರಿಂದ ಅವರು ಮಗುವಿಗೆ ಬೆಳ್ಳಿ ಗೆಜ್ಜೆ, ಕಾಲ್ಗಡಗ, ಉಡಿದಾರ, ಹಾಲುಡಿಗೆ, ಚಂದನದ ಬಟ್ಟಲು ಮೊದಲಾದವುಗಳನ್ನೆಲ್ಲಾ ಹೊತ್ತು ಸಾಗಿದ್ದರು. ನಮ್ಮ ತಪಾಸಣೆಯಲ್ಲಿ ಬಂಗಾರದ ಒಡವೆ ಮತ್ತು ಬೆಳ್ಳಿ ವಸ್ತುಗಳ ಮೇಲೆ ಅವರ ನಿಶಿತ ದೃಷ್ಟಿ ಬಿದ್ದಿರಲಿಲ್ಲ. ಆದರೇ ನಮ್ಮ ಬೀಗರ ಅನುಭವ ಬೇರೇ ಆಗಿತ್ತು. ಅಷ್ಟು ಬೆಳ್ಳಿ ಸಾಮಾನುಗಳನ್ನ ನೋಡಿ “ ನೀವು ಇಷ್ಟು ಸಾಮಾನು ಯಾತಕ್ಕೆ ತಂದಿದೀರಾ ? ಮಾರಾಟಕ್ಕಾ ? “ ಅಂತ ಕೇಳಿದರಂತೆ. ಇವರು ಕಂಗಾಲಾಗಿ ಇಲ್ಲ ಅಂತ ಎಷ್ಟು ಹೇಳಿದರೂ ಕೇಳದೇ ಅವರು ಹೇಳಿಕೆ ಪತ್ರದಲ್ಲಿ ಬರೆದುಕೊಟ್ಟಹಾಗೆ ಅವುಗಳ ತೂಕ ಸರಿಯಾಗಿ ಇದೆಯೋ ಇಲ್ಲವೋ ಎಂದು ಪರೀಕ್ಷಿಸಿದರಂತೆ. ಇದೆಲ್ಲಾ ಆಗಿ ಮುಗಿಯುವಾಗ ಒಂದು ಗಂಟೆ ತಡ. ಎಲ್ಲ ಸೂಟ್ ಕೇಸುಗಳು ಬಾಯಿತೆಗೆದು, ತಮ್ಮ ಮುಂದೆ. ಇಳಿಯುತ್ತಿದ್ದ ಬೆವರು. ಸುಸ್ತಾಗಿ ಹೋದೆವು ಅಂತ ನಮಗೆ ಹೇಳಿದರು. ಈಗ ಹೇಳಿ. ಯಾರ ಯಾರ ಅನುಭವ ಅವರದು. ಯಾರ ಯಾರ ಅನಾನುಕೂಲ ಅವರದು. ಅಲ್ಲವೇ ? ಜೀವನ ಸಹ ಅದೇ ರೀತಿ ಅಲ್ಲವೇ ? ಅವರವರ ಕಷ್ಟ ಸುಖ ಅವರವರು ಮಾಡಿದ ಪುಣ್ಯ ಪಾಪಗಳ ಮೇಲೆ ಆಧಾರಪಟ್ಟಿರುತ್ತೆ. ಅಂದರೇ ಅದೇ ಕರ್ಮ ಸಿದ್ಧಾಂತ. ಸರಿ. ಇವುಗಳಿಗೆ ಪುಷ್ಟಿಕೊಡುವ ಅನುಭವ ಮತ್ತೊಂದು ನನ್ನ ಮಗಳು ಹೇಳಿದ್ದು. ಅದೂ ತಿಳಿಸಿಬಿಡುತ್ತೇನೆ ನಿಮಗೆ. ಅವರ ಸ್ನೇಹಿತೆಯ ತಾಯಿ ಒಬ್ಬರೇ ಬಂದಿಳಿದರಂತೆ ಅಮೆರಿಕಾಗೆ. ಅವರ ಸಾಮಾನನ್ನು ತಪಾಸಿಸುವಾಗ ಆರು ಸುಲಿದ ತೆಂಗಿನಕಾಯಿ ಕಂಡುಬಂದವಂತೆ. ಅವುಗಳನ್ನು ಅವರು ಅಮೆರಿಕದೊಳಗೆ ಬಿಡಲೊಪ್ಪಲಿಲ್ಲವಂತೆ. ಅವರ ವಾದ ಅವುಗಳು ಕೊಳೆಯುವ ಪದಾರ್ಥಗಳು ನಾಟ್ ಅಲೋಡ್ ಎಂದು. ಇವರ ವಾದ ಒಂದೇ ಒಡೆದರೇ ಮಾತ್ರ ಅವುಗಳು ಹಾಳಾಗುತ್ತವೆ. ಅವುಗಳು ಇಡೀಯಾಗಿವೆಯಲ್ಲ. ಅವುಗಳು ಪೆರಿಷಬಲ್ ಅಲ್ಲ ಅಂತ. ಮತ್ತೆ ಅವರ ರಾಮಬಾಣ ವಾದ ಅದೇ “ನಿಮಗ್ಗೊತ್ತಾ ನನಗ್ಗೊತ್ತಾ”  ಅಂತ ಹೇಳಿ ಅವುಗಳನ್ನ ತಮ್ಮ ಪಕ್ಕದಲ್ಲಿದ್ದ ಕ.ಬು.ಗೆ ಹಾಕಿದರಂತೆ. ನಮ್ಮ ಆ ಹಿರಿಯ ಹೆಂಗಸಿನ ವಾದ ಸರಿಯೆನಿಸಿದರೂ ಅವರಿಗೆ ನ್ಯಾಯ ಸಿಕ್ಕಲಿಲ್ಲ. ಜೀವನದಲ್ಲೂ ಹಾಗೇ ಅಲ್ಲವೇ ? ನೀವು ಎಷ್ಟೇ ನಿಯತ್ತಿನಿಂದ ಇದ್ದರೂ ನಿಮಗೆ ಕಷ್ಟ ತಪ್ಪಲ್ಲ. ಆದಕಾರಣ ನಾನು ಹೇಳುವುದು ಎರಡು ವಿಮಾನಾಶ್ರಯಗಳ ನಡುವಿನ ಆ ಪ್ರಯಾಣ ಯಾವ ಜೀವನದ ಪ್ರಯಾಣಕ್ಕಿಂತ ಕಮ್ಮಿ ಏನಲ್ಲ ಅಂತ.                                                 ******************************

ಆಕಾಶಯಾನವೂ ಆಧ್ಯಾತ್ಮಿಕ ಚಿಂತನೆಯೂ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಮರುಳಸಿದ್ದಪ್ಪ ದೊಡ್ಡಮನಿ ನಿನ್ನ ಹೃದಯದ ನೋವು ಅರಿಯದಾಯಿತು ಗೆಳತಿಪ್ರೀತಿಯ ಆಳಕಿಳಿದು ಕೇಳಿ ತಿಳಿಯದಾಯಿತುಗೆಳತಿ ಮನವೆಲ್ಲ ಸೋತು ಮೆತ್ತಗಾಗಿ ಹೋದೆ ನಾನುಮೌನವೆ ಉಸಿರಾಗಿ ಮಾತು ಬಾರದಾಯಿತು ಗೆಳತಿ ಒಲವನೆಲ್ಲ ತಂದು ಸುರಿದರೂ ನಿನಗೆ ತಿಳಿಯಲಿಲ್ಲಗಾಯಗಳ ಬರೆಗೆ ಜೀವ ಮೇಲೇಳದಾಯಿತು ಗೆಳತಿ ಜೀವ ಶವವಾಗಿ ನರಳುತಿದೆ ನಿನ್ನೆಡೆಗಿನ ಆಸೆಗೆಬರುವಿಕೆಗೆ ಕಾದು ಜೀವ ಶವವಾಯಿತು ಗೆಳತಿ ಕಂಡ ಕನಸುಗಳೆಲ್ಲ ನುಚ್ಚು ನೂರಾದವು ನಿನಗಾಗಿಮರುಳನ ಕಣ್ಣಿರಧಾರೆ ನದಿಯಾಗಿ ಹರಿದೊಯಿತು ಗೆಳತಿ *********************************

ಗಝಲ್ Read Post »

ಕಾವ್ಯಯಾನ

ಕವಿತೆ.

ಕವಿತೆ ವಾಯ್.ಜೆ.ಮಹಿಬೂಬ ನೀ ಬರುವಾ ಹಾದಿಯೊಳಗೆಗಿರಿಮಲ್ಲೆ ಹಾಸಲೇನ ?ನಾ ನೆರಳಾಗಿ ನಿಲ್ಲಲೇನ !? ನೀ ಹಾಡೋ ರಾಗದಲ್ಲಿಧ್ವನಿಯಾಗಿ ಕೇಳಲೇನ ?ನಾ ರಸವಾಗಿ ಸುರಿಯಲೇನ ? ನೀ ಕುಡಿವ ಪ್ರಾಣ ಹನಿಗೂಮದುವಾಗಿ ಬೆರೆಯಲೇನ ?ನಾ ತತ್ರಾಣಿಯಾಗಲೇನ ? ನಿನ್ನ ನವಿಲುಗರಿಕೆ ಜಡೆಗೆಪಚ್ಚೆ ಮಲ್ಲೆ ತೊಡಿಸಲೇನ-?ದಳ ಕಮಲ ಹೊದಿಸಲೇನ-? ಕರುನಾಡ ಕಣ್ಣ ಹೆಣ್ಣೆಮಗುವಾಗಿ ಪಡೆಯಲೇನನಾ ಗುರುವಾಗಿ ಕರೆಯಲೇನ ? *****************************

ಕವಿತೆ. Read Post »

ಕಾವ್ಯಯಾನ

ಭಾವಗಳ ಹಕ್ಕಿ

ಕವಿತೆ ವಿದ್ಯಾ ಶ್ರೀ ಎಸ್ ಅಡೂರ್ ಭಾವಗಳ ಹಕ್ಕಿಗೆ ಹಾರುವುದೇ ಕೆಲಸಒಮ್ಮೆ ಆ ಮರ..ಒಮ್ಮೆ ಈ ಮರ..ಮಗದೊಮ್ಮೆ…..ಮತ್ತೊಂದು. ಗಮನಿಸಿದ್ದೇನೆ ನಾನು ಬಗೆ ಬಗೆ ಹಕ್ಕಿಗಳಸಂಜೆ ಹೊತ್ತು ನನ್ನ ಕೈತೋಟದಲ್ಲಿಭಿನ್ನ…ಭಿನ್ನ…ಒಂದೊಂದೂ. ಕೆಲವು ಗುಂಪು ಗುಂಪುಗಳವಾದರೆಕೆಲವದೋ….ಬರೀ ಗದ್ದಲ,ಇನ್ನು ಕೆಲವು ಮೌನವಾಗಿದ್ದರೆ..ಮತ್ತೂ ಕೆಲವು ಬರೀ…ಒಂಟಿ. ಬಣ್ಣ ಬಣ್ಣದ ರಂಗೋಲಿಯಂತೆ ಕೆಲವಾದರೆ,ಹಸಿರು ಮಧ್ಯೆ ಐಕ್ಯವಾದಂತೆ ಕೆಲವುನಾವಿರುವುದೇ ಹೀಗೆಂಬ ಮಾಸು ಬಣ್ಣದವು ಕೆಲವಾದರೆ,ಒಂಟಿಯಾಗಿರುವ ಕಪ್ಪು ಹಕ್ಕಿ ಮೇಲೇ….ನನಗೆ ಒಲವು. ತುಂಬೆ ಗಿಡದಲ್ಲೂ ಕೊಂಬೆ ಕೊಂಬೆಗೆ ಹಾರುವ ಪುಟ್ಟ ಹಕ್ಕಿ,ಒಂದು ಹೋದಲ್ಲೆಲ್ಲ ಇನ್ನೊಂದೂ ಹೋಗುವ ಜೋಡಿ ಹಕ್ಕಿ,ಕಾಳು ಕಂಡರೆ ತನ್ನವರ ಕರೆವ ಗುಂಪು ಹಕ್ಕಿ,ಗಾಜಿನ ಕಿಟಕಿಯ ತೂತು ಮಾಡಿಯೇ ಸಿದ್ಧ ಎಂಬಂತ ಹಠಮಾರಿ ಹಕ್ಕಿ , ಹೀಗೇ ..ಎಲ್ಲಾ ಹಕ್ಕಿಗಳಲ್ಲಿಯೂ ಕಾಣುವೆನು ನಾನು ನನ್ನನ್ನೇ..ನನ್ನದೇ ಭಾವ…ನನ್ನದೇ ನೋವು…ನಲಿವುಪ್ರಕೃತಿಯೇ ಹಾಗೆ…ನಮ್ಮ ನೋಟಕ್ಕೆ ತಕ್ಕಂತೆ ಅದರ ಅರ್ಥಆ ಅರ್ಥ ಹುಡುಕುವ ಏಕಾಂತದತ್ತವೇ…ನನ್ನ ಸೆಳವು. ********************************

ಭಾವಗಳ ಹಕ್ಕಿ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ರೇಷ್ಮಾ ಕಂದಕೂರ. ಹಸಿವಿನಿಂದ ಕಂಗೆಟ್ಟವರ ತೊಳಲಾಟ ನೋಡದಾಗಿದೆಕೃಶ ದೇಹದ ಅಧೋಗತಿಯ ಪರಿಸ್ಥಿತಿ ನೋಡದಾಗಿದೆ ಕಮರಿದೆ ಭರವಸೆಯ ಬೆಳಕು ಮಂದಾಗ್ನಿಯಲಿಹಣೆಬರಹದ ಕ್ರೂರತನ ಮದವೇರಿದನು ನೋಡದಾಗಿದೆ ತುತ್ತಿನ ಚೀಲ ತುಂಬಿಸಲು ಕಗ್ಗಂಟಾಗಿ ಹೋಗಿದೆಆ ದೇವನ ದೂಷಿಸತ ದಿನ ದೂಡುವದನು ನೋಡದಾಗಿದೆ ತಿಂದು ತೇಗಿ ಬಿಸಾಕುವ ಜನಕೆ ತಿಳಿಯಬಾರದೇಕೊಳ್ಳುಬಾಕ ಮನೋಭಾವದಿ ಮೆರೆಯುವವರ ನೋಡದಾಗಿದೆ ಪರಿಹಾರಕೆ ರೇಷಿಮೆಯ ಮನ ಮರುಗಿ ತಡಕಾಡಿದೆಪಿಷ್ಟ ಹೊತ್ತು ಕುಚೇಷ್ಟೆ ಮಾಡುವವರ ನೋಡದಾಗಿದೆ. ****************************

ಗಝಲ್ Read Post »

ಕಾವ್ಯಯಾನ

ಅವಳು ಮತ್ತು ಅಗ್ಗಿಷ್ಟಿಕೆಯು..!!

ಕವಿತೆ ವೀಣಾ ಪಿ. ಧೋ………. ಎಂದೆನುತೆ ಸುರಿಮಳೆಯ ದಾರ್ಢ್ಯತೆಯ ಗಡ-ಗಡನೆ ನಡುಗಿಸುವ ತಣ್ಣೀರ ಧಾವಂತಕೆ ತೊಯ್ದ ಕಾಯವ ಮುಚ್ಚಿಟ್ಟ ಸೀರೆಯ ಸೆರಗಿನಂಚನು ಹಿಂಡುತಲಿ ಗುಡುಗು-ಮಿಂಚಿನ ಸೆಡವಿಗೆ ಭಯಗೊಂಡ ಹುಲ್ಲೆಯಂತಾದ ಭಾವದಲಿ ಬರದೂರ ಬಯಲಿಂದ ಕಟ್ಟಿಗೆಯನಾಯಲು ಕಾನನಕೆ ಬಂದಾಕೆ ಸಂಜೆ ಮಳೆಗೆ ಸಿಲುಕಿರಲು ಕತ್ತಲಾವರಣದಂಜಿಕೆಗೆ ದೂರದಂಚಿನ ಬೆಳಕು ಅರಸುತ್ತಲೋಡುತ್ತ ಅದಾವುದೋ ಹಿತ್ತಲಿನ ಹೊಚ್ಚನೆಯ ತಾವತ್ತ ಹೊರಳಿಸಿರೆ ಅಂಜುತಲಿ ಜಿಂಕೆ ಕಣ್ಗಳನು ಬೆಳದಿಂಗಳಂತಿವಳ ಸೆಳೆದು ಕಾವು ಕೊಡುವೆನೆಂದೆಂಬ ಕಾಮದಲಿ ಅಗ್ಗಿಷ್ಟಿಕೆಯೊಂದು ಉರಿಜ್ವಾಲೆಯಾಡಂಬರ ತೋರುತಿರೆ.. ತಾ ತೋಯ್ದ ಗತಿ ಮರೆತು ಚಡಪಡಿಕೆ ಪುಟಿಸುತ್ತ ಹೊರಟೇ ಬಿಟ್ಟಳಾಕೆ ತನ್ನಿರುವಿಲ್ಲದೇ ತೊಟ್ಟಿಲಲಿ ಕನಲುತಿಹ ಕಂದನ ಕನವರಿಕೆಯಲಿ.. ಇತ್ತ ಅಗ್ಗಿಷ್ಟಿಕೆ ಬಳಿ ಸಾರದವಳನ್ನು ಹಳಿಯುತ್ತ ಕೆಂಡ ಕೆದರಿ ಮತ್ತೊಂದು ಹೊಸ ಜಿಂಕೆ ಬಂದೀತು ಬಳಿ ಸಾರಿ ಎಂಬಂತೆ ಧಗ-ಧಗನೆ ಉರಿಯುತ್ತಿತ್ತು..!! ***********************

ಅವಳು ಮತ್ತು ಅಗ್ಗಿಷ್ಟಿಕೆಯು..!! Read Post »

ಅಂಕಣ ಸಂಗಾತಿ, ಮೂರನೇ ಆಯಾಮ

ಶಬ್ಧಭಾರವಿಲ್ಲದ ಮನದ ಮಾತುಗಳು

ಅಂಕಣ ಬರಹ ಶಾಂತಿ ಬೀಜಗಳ ಜತನಲೇಖಕರು- ಪ್ರಕಾಶ ಖಾಡೆಯಾಜಿ ಪ್ರಕಾಶನಬೆಲೆ-೧೨೦ ಶಾಂತಿ ಬೀಜಗಳ ಜತನಲೇಖಕರು- ಪ್ರಕಾಶ ಖಾಡೆಯಾಜಿ ಪ್ರಕಾಶನಬೆಲೆ-೧೨೦ ಜಗತ್ತು ವಿಚಿತ್ರ ಸಂದಿಗ್ಧತೆಯಲ್ಲಿದೆ. ಯಾರನ್ನು ನಂಬುವುದೋ, ಯಾರನ್ನು ಮಿತ್ರರೆನ್ನುವುದೋ ಎನ್ನುವ ದ್ವಂದ್ವ ಎಲ್ಲರನ್ನೂ ಕಾಡುತ್ತಿರುವ ಈ ಹೊತ್ತಿನಲ್ಲಿ ಆತ್ಮೀಯ ಮಿತ್ರರೂ ಶತ್ರುಗಳಾಗಿಬಿಡುವ ವಿಕಲ್ಪತೆಯ ದಿನಗಳಿವು. ನಾವು ಮನುಷ್ಯರೋ ಅಥವಾ ಮನುಷ್ಯ ರೂಪದಲ್ಲಿರುವ ಆತ್ಮ ಸತ್ತ ದೇಹಗಳೋ ಎಂಬ ಅನುಮಾನ ನಮ್ಮನ್ನೇ ಕಾಡುತ್ತಿರುವ ಈ ವಿಚಿತ್ರ ಸನ್ನಿವೇಶದಲ್ಲಿ ಹಿರಿಯ ಕವಿ ಪ್ರಕಾಶ ಖಾಡೆಯವರು ಮಾನವಿಯತೆಯನ್ನು ಹುಡುಕುತ್ತ ಹೊರಡುತ್ತಾರೆ.ಏನೂ ಬೇಡವೆಂದುಮನುಷ್ಯ ನಾಗಬೇಕೆಂದಿದ್ದೇನೆ ಮನುಷ್ಯತ್ವ ಹುಡುಕಿ ನಿಮ್ಮೊಂದಿಗೆಮುಖಾಮುಖಿಯಾಗಿದ್ದೇನೆ ಎನ್ನುವ ಮೊದಲ ಕವಿತೆಯ ಸಾಲುಗಳನ್ನು ಓದುತ್ತಲೆ ಮನಸ್ಸು ಅಲ್ಲಿಯೇ ನಿಂತುಬಿಡುತ್ತದೆ.ಪ್ರಕಾಶ ಖಾಡೆಯವರ ಈ ಸಾಲುಗಳು ನಮ್ಮನ್ನು ಮತ್ತೆ ಮತ್ತೆ ಚಿಂತನೆಗೆ ಹಚ್ಚುವಂತೆ ಮಾಡುತ್ತದೆ. ಕೊರೋನಾ ಕಾಲಘಟ್ಟದಲ್ಲಿ  ಮಾನವೀಯತೆಯನ್ನು ಎಲ್ಲಿ ಹುಡುಕುತ್ತೀರಿ? ಒಂದು ಸಾವಿಗೆ ನ್ಯಾಯ ಕೊಡಿಸಲೂ ಕೂಡ ಈ ಕಾಲಘಟ್ಟ ಸಹಕರಿಸುತ್ತಿಲ್ಲ. ಯಾರೋ ಸತ್ತ ಸುದ್ದಿಗೆ ಸ್ಪಂದಿಸುವ ಮೊದಲು ಸತ್ತವನು ಹೇಗೆ ಸತ್ತ? ಕೊರೋನಾ ಬಂದಿತ್ತಾ? ಹಾಗೇನಾದರೂ ಇದ್ದರೆ ಅಂತ್ಯ ಸಂಸ್ಕಾರಕ್ಕೆ ಹೋಗುವುದೇ ಎನ್ನುವ ಪ್ರಶ್ನೆಯೇ ಮೊದಲು ಉತ್ಪನ್ನವಾಗುವುದು. ಕಾಲ ಹೀಗಿರುವಾಗ ಮಾನವೀಯತೆಯನ್ನು ಹುಡುಕಿ ಹೊರಡುವುದಾದರೂ ಎಲ್ಲಿಗೆ. ಇಂತಹ ದುರಿತ ಕಾಲದಲ್ಲೂ ಮಾನವೀಯತೆಯನ್ನು ಹುಡುಕುವ ಪ್ರಕಾಶ ಖಾಡೆಯವರ ಮಾನವೀಯ ಹುಡುಕಾಟ ಇಂದು ಎಲ್ಲರ ಹುಡುಕಾಟ ಆಗಬೇಕಾದ ಅವಶ್ಯಕತೆಯಾಗಿದೆ.  ನಮ್ಮ ಜೊತೆಗಿದ್ದವರನ್ನು ಮರೆತು ಬಿಡುತ್ತಿದ್ದೇವೆ. ಹೊಳೆ ದಾಟಿದ ನಂತರ ಅಂಬಿಗನ ಹಂಗಾದರೂ ಏಕೆ ಬೇಕು ಎಂಬಂತೆ ವರ್ತಿಸುವುದು ಎಲ್ಲರಿಗೂ ರೂಢಿಯಾಗುತ್ತಿದೆ. ಹೀಗಾಗಿ ನಮ್ಮ ಜೊತೆಗಿದ್ದವರನ್ನು ಎಷ್ಟು ಸುಲಭವಾಗಿ ಮರೆತುಬಿಡುತ್ತಿದ್ದೇವೆ ಎಂದರೆ ನಮ್ಮನ್ನು ಪ್ರೀತಿಸುವವರನ್ನು ಸುಲಭವಾಗಿ ದೂರ ಮಾಡಿಕೊಳ್ಳುತ್ತೇವೆ. ಮತ್ತೊಂದು ಮೈತ್ರಿಯನ್ನು ರಚಿಸಿಕೊಳ್ಳುತ್ತೇವೆ. ಅದು ವೈಯಕ್ತಿಕ ಪ್ರೀತಿಯೇ ಇರಬಹುದು. ರಾಜತಾಂತ್ರಿಕ ಕಾರಣಗಳೇ ಇರಬಹುದು. ಯಾವುದೂ ಸ್ಥಿರವಲ್ಲ. ಇಂದು ಸ್ನೇಹಿತನಂತೆ ವರ್ತಿಸುವ ದೇಶವೊಂದು ಕಣ್ಣು ಮುಚ್ಚಿ ತೆರೆಯುವುದರೊಳಗೆ ಶತ್ರು ದೇಶವಾಗಿಬಿಡಬಹುದು. ಅನಾದಿ ಕಾಲದಿಂದಲೂ ಭಾರತದ ನೆರಳಾಗಿದ್ದ ನೇಪಾಳ ಕೂಡ ನಮ್ಮ ದೇಶದ ಭಾಗಗಳನ್ನು ತನ್ನದೆಂದು ಒತ್ತುವರಿ ಮಾಡಿಕೊಂಡ ಹಾಗೆ.      ಕೆಲವು ದಿನಗಳ ಹಿಂದೆ ಸ್ನೇಹಿತರೊಬ್ಬರು ತಮ್ಮ ಪ್ರೀತಿಯ ವಿಷಯವನ್ನು ಹೇಳಿಕೊಳ್ಳುತ್ತಿದ್ದರು. ನಾನು ತಮಾಷೆಗೆ ‘ಅವಳನ್ನು ಎಷ್ಟು ಪ್ರೀತಿಸುತ್ತೀರಿ?’ ಎಂದು ಕೇಳಿದ್ದೆ. ಗೊತ್ತು, ಹಾಗೆ ಪ್ರೇಮವನ್ನು ಪ್ರಮಾಣಿಸಲಾಗುವುದಿಲ್ಲ ಎಂಬುದು. ಆದರೆ ಅವರು ಹೇಳಿದ ಮಾತು ನಿಜಕ್ಕೂ ನನ್ನನ್ನು ತಲ್ಲಣಗೊಳಿಸಿತ್ತು. ‘ಇವೆಲ್ಲ ಇಂದಿದ್ದು ನಾಳೆ ಮರೆಯಾಗುವಂತಹುದ್ದು. ನಿಜ ಜೀವನದಲ್ಲಿ ಇಂತಹ ಪ್ರೇಮಗಳು ಕೊನೆಯವರೆಗೆ ಮುಂದುವರೆಯುವಂತಹುದ್ದಲ್ಲ’ ಎಂದಿದ್ದರು. ನಾನು ದಂಗಾಗಿದ್ದೆ. ಒಂದು ಪ್ರೀತಿಯನ್ನು ಉಸಿರಿರುವವರೆಗೆ ಕಾಪಿಡುವ ನಾವು ಅದೆಷ್ಟು ಬೇಗ ಪ್ರೀತಿಯನ್ನು ದಿನನಿತ್ಯ  ಬದಲಾಯಿಸುವ ಉಡುಪಿಗೆ ಸಮನಾಗಿಸಿಕೊಂಡು ಬಿಟ್ಟೆವು ಎಂಬುದು ಅರ್ಥವಾಗುತ್ತಿಲ್ಲ. ಹಾಗೆ ನೋಡಿದರೆ ಇಂದು ಧರಿಸಿದ ಮೇಲುಡುಪನ್ನು ನಾಳೆಯೂ ಧರಿಸುತ್ತೇವೆ. ಆದರೆ ಪ್ರೀತಿ ಎಂಬುದು ಒಳ ಉಡುಪಿನಂತಾಗಿದೆ. ಒಳ ಉಡುಪನ್ನು ಇಂದು ಧರಿಸಿದರೆ ಕಡ್ಡಾಯವಾಗಿ ಮರುದಿನ ಬದಲಾಯಿಸುತ್ತೇವೆ. ಹಾಗಿದ್ದರೆ ನಾವು ಜೊತೆಗಿರಬೇಕೆಂದರೆ ಜೊತೆಜೊತೆಯಾಗಿ ಇಟ್ಟ ಹೆಜ್ಜೆಗಳಿಗೆ ಕಡ್ಡಾಯವಾಗಿ ಒಂದು ಸಾಕ್ಷಿಯನ್ನು ಹುಡುಕಿಕೊಳ್ಳಬೇಕೆ?ಜೊತೆಗೆ ಬಂದವರ ನೆನಪುಗಳಿಗೆಸವೆದ ದಾರಿಯಷ್ಟೇ ಸಾಕ್ಷಿಎನ್ನುವ ಕವಿಗೆ ಅರಿವಿದೆ, ಸವೆದ ದಾರಿಗಳಾದರೂ ಅದೆಷ್ಟು ದಿನ ತನ್ನ ಸಾಕ್ಷಿಯನ್ನು ಉಳಿಸೀತು? ಧೂಳು ಹಾರಿ ನಡೆದ ಹೆಜ್ಜೆಯ ಗುರುತಿನ ಸಾಕ್ಷಿಯನ್ನು ಅಳಿಸಿಬಿಡಲು ಅದೆಷ್ಟು ಸಮಯ ಬೇಕು?ಪುಟ್ಟ ಹೃದಯದಲ್ಲಿಒಂದಿಷ್ಟು ಜಾಗ ಖಾತ್ರಿ ಮಾಡಿಕೊಳ್ಳಬೇಕುಬದುಕಿನ ಸಾಕ್ಷಿಗೆಕಡಲ ದಂಡೆಯಲ್ಲಿ ಬೆಳೆದವಳು ನಾನು. ನಡೆಯುವ ಹೆಜ್ಜೆ ಮೂಡುವ ಮುನ್ನವೇ ಅಲೆಯ ಮೃದು ಚುಂಬನಕ್ಕೂ ಹೆಜ್ಜೆ ಗುರುತು ಕರಗಿಬಿಡುವ ಮರ್ಮದ ಅರಿವಿದೆ. ಹೀಗಾಗಿ ಕವಿ ಹೇಳುವ ಜೊತೆಗಿದ್ದುದಕ್ಕೆ  ಸವೆದ ಹಾದಿಗಾಗಿ ಹೊಸ ಸಾಕ್ಷಿಯನ್ನು ಹುಡುಕಲೇ ಬೇಕಾದ ಅನಿವಾರ್‍ಯತೆಯಿದೆ.ದಾರಿಗೆ ಮುಳ್ಳನ್ನುಹೂವ ತಂದವರೇ ಹಚ್ಚಿದ್ದಾರೆನಮಗೆ ಹೂವು ನೀಡುವ ನಾಟಕವಾಡುತ್ತಲೇ ನಮ್ಮ ದಾರಿಗೆ ಮುಳ್ಳನ್ನಿಡುವ ಗೋಮುಖ ವ್ಯಾಘ್ರಗಳ ಸಂಖ್ಯೆ ಈಗ ಹೆಚ್ಚಿದೆ. ಜೊತೆಗಿರುತ್ತಲೇ ಮಗ್ಗುಲಿಗೆ ಚೂರಿ ಹಾಕುವ, ಬೆಣ್ಣೆಯಂತಹ ಮಾತನಾಡುತ್ತಲೇ ಊಟಕ್ಕೆ ವಿಷವಿಕ್ಕುವವರ ನಡುವೆ ನಾವೀಗ ಬದುಕಬೇಕಿದೆ.ಹಿಂದೆ ಮಾತನಾಡುವವರ ನಾಲಿಗೆಹರದಾರಿ ಚಾಚಲಿ ಬಿಡಿನಮ್ಮ ಶಾಂತ ಮನಸ್ಸು ವಿಚಲಿತವಾಗದಿರಲಿಎನ್ನುತ್ತಾರೆ ಕವಿ. ಯಾವ ಸ್ನೇಹವೂ ಅರ್ಥ ಉಳಿಸಿಕೊಳ್ಳದ ಈ ತುರ್ತು ಸ್ಥಿತಿಯಲ್ಲಿ ನಮ್ಮ ಬೆನ್ನ ಹಿಂದೆ ಆಡಿಕೊಳ್ಳುವವರ ದೊಡ್ಡ ದಂಡೆ ಇರುತ್ತದೆ.  ಕೆಟ್ಟ ಕೆಲಸ ಮಾಡಿದರೆ ಅದು ಸಹಜವೇ. ಆದರೆ ಒಳ್ಳೆಯ ಕೆಲಸಕ್ಕೂ ಕುರುಬುವವರಿಗೇನೂ ಕಡಿಮೆಯಿಲ್ಲ. ಪ್ರತಿಯೊಂದು ಯಶಸ್ವಿ ಹೆಜ್ಜೆಗೂ ಬೆನ್ನ ಹಿಂದೊಂದು ಹಿತಶತ್ರುಗಳ ಗುಂಪೇ ತಯಾರಾಗುತ್ತದೆ. ಇಡುವ ಪ್ರತಿ ಹೆಜ್ಜೆಗೂ ಒಂದು ಕುಹಕ ಸಿದ್ಧವಾಗಿರುತ್ತದೆ. ಹೀಗಾಗಿ ಕವಿ ಬೆನ್ನಿರಿಯುವವರ ಕುರಿತೂ ನಮ್ಮ ಮನಸ್ಸು ಶಾಂತವಾಗಿರಬೇಕೆಂದು ಬಯಸುತ್ತಾರೆ. ಹಾಗೊಂದುವೇಳೆ ನಮ್ಮ ಮನದ ಹತೋಟಿಯನ್ನು ನಾವೇ ಕಳೆದುಕೊಂಡು ಬಿಟ್ಟರೆ ಬುದುಕು ಮೂರಾಬಟ್ಟೆಯಾಗುವುದು ನಮ್ಮದೇ. ಏಕೆಂದರೆ,ಎಲೆ ಉದುರಿಸಿಕೊಂಡುಬೋಳಾಗುವ ಮರಗಳಿಗೂಬರಡಾಗುವ ನೋವುಇದ್ದೇ ಇರುತ್ತದೆ. ಅಂದರೆ ಕಳೆದುಕೊಂಡ ಎಲೆಗಳ ಜಾಗದಲ್ಲೊಂದು ಕಲೆ ಮರದಲ್ಲಿ ಸಾಶ್ವತವಾಗಿ ಉಳಿದುಬಿಡುವಂತೆ ಸಂಬಂಧದ ಕುರುಹುಗಳೂ ಶಾಶ್ವತವಾಗಿ ಉಳಿಯಲೇ ಬೇಕಿದೆ. ತೆಂಗಿನ ಮರದ ಗರಿ/ ಹೆಡೆ ಬಿದ್ದಾಗ ಮರದ ಕಾಂಡದಲ್ಲಿ ಅದರದ್ದೊಂದು ಗುರುತು ಹಾಗೆಯೇ ಉಳಿದು ಮರದ ಬೆಳವಣಿಗೆಯ ಸಾಕ್ಷಿ ಹೇಳುತ್ತದೆ. ಹೀಗಿರುವಾಗ ಜೀವನದಲ್ಲಿ ಹಿಂದೆ ಬಿಟ್ಟು ಹೋದ ಪ್ರೀತಿಗೊಂದು ಸಾಕ್ಷಿ ಬೇಡವೇ? ಹಾಗೆಂದು ಸಾಕ್ಷಿ ಕೇಳಿದರೆ ಮಾತುಗಳು ಹಾಗೇ ಉಳಿಯಬಹುದೇ? ಈಗ ಆಡಿದ ಮಾತನ್ನು ಇನ್ನೊಂದು ಕ್ಷಣದಲ್ಲೇ ತಿರುಗಿಸಿ ಹಾಗೆ ಹೇಳಿದ್ದು ನಾನಲ್ಲ ಎಂದು ಬಿಡುವಾಗ ಆಡುವ ಮಾತುಗಳಿಗೆ ಬೆಲೆಯೆಲ್ಲಿದೆ. ಹಾಗೆಂದೇ ಕವಿ ಎಷ್ಟೊಂದು ಮಾತುಗಳುತೂಕ ಕಳೆದುಕೊಂಡಿವೆ ಇಲ್ಲಿಎನ್ನುತ್ತಾರೆ. ಜೀವನದಲ್ಲಿ ಮಾತಿಗೆ ಬೆಲೆಯಿಲ್ಲ ಎಂದಾದರೆ ಮುಂದೆ ಅವರ ಮಾತಿಗೆ ಬೆಲೆ ಕೊಡುವವರಾದರೂ ಯಾರು? ಇಲ್ಲ. ಜೀವನದಲ್ಲಿ ಒಮ್ಮೆ ಕೊಟ್ಟ ಮಾತಿಗೆ ತಪ್ಪಿದರೆ ಮುಂದೆ ಯಾರೂ ಕೂಡ ನಂಬದಂತಹ ಸ್ಥಿತಿ ತಲುಪಿಬಿಡುತ್ತೇವೆ. ಆದರೆ ಕವಿ ಆಶಾವಾದಿ. ಹೀಗಾಗಿ ಬದುಕಿನ ತುಂಬ ಕನಸುಗಳನ್ನು ಉತ್ತು ಬೆಳೆಯುವ ಮಹದಾಸೆ ಇಟ್ಟುಕೊಂಡಿರುವವರು. ಕನಸುಗಳಿಲ್ಲದ ಜಾಗದಲ್ಲಿ ಒಂದು ಕ್ಷಣವೂ ಇರಲಾಗದು. ಕನಸುಗಳಿದ್ದರೆ ಆಕಾಶ ಕೂಡ ತನ್ನ ವಿಸ್ತಾರವನ್ನು ಹೆಚ್ಚಿಸಿಕೊಳ್ಳುತ್ತದೆ. ಸೂರ್‍ಯ ಕೂಡ ಇನ್ನಷ್ಟು ಪ್ರಕಾಶಮಾನವಾಗುತ್ತಾನೆ. ಕನಸಿನ ಶಕ್ತಿಯೇ ಅಂತಹದ್ದು. ಕಿತ್ತಷ್ಟು ಬೆಳೆವ ಕಸಕ್ಕೆಹೇಳದೆ ಬರುವ ಕನಸಿಗೆತೆರೆದಷ್ಟು ಆಕಾಶ, ಉಳಿದಷ್ಟು ಪ್ರಕಾಶಎನ್ನುವ ಕವಿಸಾಲುಗಳಲ್ಲಿ ನಿಜ ಜೀವನದ ಅನುಭವವೇ ಮೇಳೈಸಿದೆ. ಇಷ್ಟಾದರೂ ಕವಿಗೆ ಅರಿವಿದೆ. ಯಾರ ಮನಸ್ಸಿನಲ್ಲಿ ಅಪಾರವಾದ ನೋವಿರುತ್ತದೆಯೋ ಅವರು ತಮ್ಮ ನೋವನ್ನು ಮರೆಮಾಚಲು ಸದಾ ನಗುತ್ತ, ಇತರರನ್ನೂ ನಗಿಸುತ್ತಿರುತ್ತಾರಂತೆ. ನಗೆ ಮಾಂತ್ರಿಕ ಚಾರ್ಲಿ ಚಾಪ್ಲಿನ್‌ನ ಬದುಕು ನೋವಿನಿಂದ ಕೂಡಿದ್ದು. ಬಡತನದ ಬೇಗೆಯಲ್ಲೂ ಆತ ತಾನೂ ನಗುತ್ತ, ಉಳಿದವರನ್ನೂ ನಗಿಸುತ್ತಿದ್ದ. ‘ನಾನು ಸದಾ ಮಳೆಯಲ್ಲಿ ನೆನಯಲು ಇಷ್ಟಪಡುತ್ತೇನೆ. ಏಕೆಂದರೆ ನನ್ನ ಕಣ್ಣೀರು ಆಗ ಜಗದ ಕಣ್ಣಿಗೆ ನನ್ನ ಕಣ್ಣೀರು ಕಾಣಿಸುವುದಿಲ್ಲ ಎಂದ ಆತನ ಮಾತು ಸದಾ ನನ್ನನ್ನು ಕಾಡುತ್ತಿರುತ್ತದೆ. ಕವಿ ಕೂಡ ಇದೇ ಮಾತನ್ನು ಹೇಳುತ್ತಾರೆ. ನನಗೆ ಕೋಪಿಸಿಕೊಂಡವರ ನೋಡಬೇಕಿತ್ತುಮುಗುಳ್ನಗುವವರ ಬಳಿಹೋದೆಕೋಪಗೊಂಡವರ ಮುಖದಲ್ಲಿ ಮುಗುಳ್ನಗುವಿದೆ. ಹಾಗೆ ನೋಡಿದರೆ ನಮ್ಮ ಮೇಲೆ ಕೋಪಿಸಿಕೊಂಡವರೂ ಅದನ್ನು ಮರೆಮಾಚಲು ಮುಗುಳ್ನಗುತ್ತಿರುವ ಸಾಧ್ಯತೆಗಳನ್ನೂ ಅಲ್ಲಗಳೆಯುವಂತಿಲ್ಲ.  ಆದರೂ ಯಾವ ಮುಗುಳ್ನಗುವೂ ನಮ್ಮ ನಡುವಿನ ಬೇಲಿಯನ್ನು ಕಿತ್ತೆಸೆಯಲಾಗುತ್ತಿಲ್ಲ. ಮನುಷ್ಯ, ಮನುಷ್ಯನ ನಡುವೆ ಕಟ್ಟಿಕೊಂಡಿರುವ ಮನದ ಬೇಲಿಯನ್ನು ಕಿತ್ತೆಸೆಯದೇ ಐಕ್ಯತೆ ಸಾಧಿಸುವುದಾದರೂ ಹೇಗೆ? ಯಾವ್ಯಾವುದೋ ಕ್ಷುಲ್ಲಕ ಕಾರಣಕ್ಕಾಗಿ ಒಬ್ಬರ ಮೇಲೊಬ್ಬರು ಕೋಪಿಸಿಕೊಂಡು ಮನಸ್ಸನ್ನು ಕಲ್ಲಾಗಿಸಿಕೊಳ್ಳುತ್ತಿದ್ದೇವೆ. ಅದೇ ಕಲ್ಲುಗಳನ್ನು ಒಂದರ ಮೇಲೊಂದನ್ನು ಪೇರಿಸಿ ಭದ್ರವಾದ ಗೋಡೆ ಕಟ್ಟುತ್ತೇವೆ. ಪ್ರೀತಿ, ಅಂತಃಕರಣದ ಬೆಳಕಿನ ಕಿರಣ ನಮ್ಮ ಹೃದಯವನ್ನು ತಾಗದಂತೆ ಬಂದೋಬಸ್ತು ಮಾಡಿಕೊಂಡಿದ್ದೇವೆ. ಎಷ್ಟೊಂದು ಬೇಲಿಗಳುತಲೆ ಎತ್ತಿವೆ ಇಲ್ಲಿ ಎನ್ನುವ ಕವಿ ನಮ್ಮ ಗುರಿ ತಲುಪುವ ಪೈಪೋಟಿಯಲ್ಲಿ ಏಟು ತಿಮದವರ ಆರ್ತನಾದವನ್ನು ಕೇಳಿ ಮರುಗುವ ಸೂಕ್ಷ್ಮತೆಯನ್ನು ಮರೆಯುತ್ತಿರುವುದರ ಕುರಿತು ಹೇಳಿದ್ದಾರೆ. ಚಿಕ್ಕ ಮಕ್ಕಳು ರಸ್ತೆಯಲ್ಲಿ ಹೋಗುತ್ತಿರುವ ನಾಯಿಗೆ ಕಲ್ಲೆಸೆಯುತ್ತಾರೆ. ಕಲ್ಲೇನಾದರೂ ಕಾಲಿಗೆ ತಾಗಿದರೆ ಕುಯ್ಯೋ ಮರ್ರೋ ಎನ್ನುವ ಅದರ ರೋಧನೆ ಕೇಳಿಬಿಟ್ಟರೆ ಮಕ್ಕಳಿಗೆ ಮತ್ತೂ ಕಲ್ಲು ಹೊಡೆಯುವ ಉಮ್ಮೇದಿ ಹೆಚ್ಚುತ್ತದೆ. ಒಬ್ಬನಿದ್ದವನು ನಾಲ್ಕಾಗುತ್ತಾರೆ, ಹತ್ತಾಗುತ್ತಾರೆ. ನಾಯಿಯ ನೋವಿನ ಆಕ್ರಂದನ ಹೆಚ್ಚಿದಷ್ಟೂ ಪೈಶಾಚಿಕ ಸಂತೋಷ ಸಿಕ್ಕಂತೆ ಬಲ ಬರುತ್ತದೆ. ಚಿಕ್ಕ ಮಕ್ಕಳಲ್ಲಿಯೇ ಈ ಮನೋಭಾವವನ್ನು ಕಾಣುವಾಗ ಕಲ್ಲು ಹೊಡೆದು ನಮ್ಮವರನ್ನೇ ಗಾಯಗೊಳಿಸಿ ಅಳಿಸಲು ದೊಡ್ಡವರಾದವರು ಹಿಂದೆಮುಂದೆ ನೋಡಿಯಾರೆ? ಎಸೆದ ಕಲ್ಲಿಗೆಗುರಿಯಷ್ಟೇ ಗೊತ್ತುಪೆಟ್ಟು ತಿಂದವರ ಆರ್ತನಾದ ಕೇಳದು ಆದರೆ ಕವಿ ಇಡೀ ಸಂಕಲನದಲ್ಲಿ ಎಲ್ಲಿಯೂ ದ್ವೇಷ ತಿರಿಸಿಕೊಳ್ಳುವ ಮಾತನಾಡುವುದಿಲ್ಲ. ಎಲ್ಲಿಯೂ ಹೊಡಿ ಬಡಿಯ ಶಬ್ಧಗಳಿಲ್ಲ. ತೀರಾ ಸರಳವಾದ ಮಾತುಗಳಲ್ಲಿ, ನಯವಾಗಿಯೇ ಹೇಳಬೇಕಾದುದನ್ನು ಹೇಳಿ ತಣ್ಣಗೆ ಕುಳಿತುಬಿಡುತ್ತಾರೆ. ಉದ್ವೇಗದ ಹೇಲಿಕೆಗಳಿಲ್ಲ, ಆದ ಅಪಮಾನಕ್ಕೆ ಸೇಡು ತಿರಿಸಿಕೊಳ್ಳಬೇಕೆಂಬ ವಾಂಛೆಯಿಲ್ಲ. ಎಲ್ಲವರೂ ತನ್ನವರು ಎನ್ನುವ ಸಹಜ ಪ್ರೀತಿಯ ಕವನಗಳಿವು. ಅಪಮಾನಗಳನ್ನು ನುಂಗಿ ಪ್ರೀತಿಯನ್ನೇ ಹಂಚುವ ಶುದ್ಧ ಹೃದಯದ ಭಾವಗಳಿವು.ನಾವು ಆದ ಅಪಮಾನಉಂಡ ನೋವು ಮರೆತುಪ್ರೀತಿ ಹಂಚಿಕೊಳ್ಳುತ್ತೇವೆಅವರೋ ಉರಿವ ಬೆಂಕಿಗೆ ಎಣ್ಣಿ ಸುರಿಯುತ್ತಾರೆಹೀಗೆ ಅವಮಾನವನ್ನು ಮರೆತು ಪ್ರೀತಿಯನ್ನೇ ಬೊಗಸೆಯಲ್ಲಿಟ್ಟುಕೊಂಡು ನೀಡಿದರೂ ಅದನ್ನು ಸ್ವೀಕರಿಸಲೂ ಒಂದು ಅರ್ಹತೆ ಬೇಕಲ್ಲ.? ಪ್ರೀತಿಯ ಮೇಲೆ ಸುಡು ಸುಡು ಎಣ್ಣೆ ಸುರಿದು ತಮಾಷೆ ನೋಡುವ ಮನಸ್ಥಿತಿ ಇಲ್ಲಿದೆ. ಹೊತ್ತುರಿಯುವ ದ್ವೇಷಕ್ಕೆ ಎಣ್ಣೆ ಸುರಿದು ಪ್ರಜ್ವಲಿಸುವಂತೆ ಮಾಡಬಲ್ಲರೇ ಹೊರತೂ ಶತ್ರುತ್ವವನ್ನು ಅಳಿಸಿ ಪ್ರೀತಿಯ ಹೂವನ್ನು ಅರಳಿಸುವ ಪ್ರಯತ್ನ ಮಾಡುವವರು ಸಿಕ್ಕಾರಾದರೂ ಎಲ್ಲಿ?ನಾನು ಸುಳ್ಳುಗಳ ಸೂಡು Pಟ್ಟಿಟ್ಟುಸತ್ಯದ ಬೆನ್ನು ಹತ್ತಿದೆಆದರೂ ದ್ವಂದ್ವಗಳುವಿಜೃಂಭಿಸಿ ಹೋದವುಬದುಕು ನಮ್ಮನ್ನು ಹೈರಾಣಾಗಿಸುತ್ತಿದೆ. ಸುಳ್ಳಿನ ಸುಡನ್ನು Pಟ್ಟಿಟ್ಟು ಸತ್ಯದ ಬೆನ್ನು ಹತ್ತುತ್ತಿದ್ದರೂ ವಿಜೃಂಭಿಸುವ ಕಟು ವಾಸ್ತವವೂ ಕೆಲವೊಮ್ಮೆ ಸತ್ಯದ ಮುಖವಾಡದಲ್ಲಿ ಅಡಗಿದ ಸುಳ್ಳುಗಳಾಗಿರುತ್ತವೆ ಎಂಬುದನ್ನು ಮರೆಯುವಂತಿಲ್ಲ. ನಾವೇನಾಗಬೇಕೆಂದು ಬಯಸಿದ್ದೆವೋ ಅದನ್ನು ಸಾಧಿಸುವುದಕ್ಕಾಗಿ ಸತ್ಯ ಸುಳ್ಳುಗಳನ್ನು ಒಂದಾಗಿಸುತ್ತಿದ್ದೇವೆ. ಮತಮತದಲ್ಲಿ, ಜಾತಿಜಾತಿಯಲ್ಲಿ ದ್ವೇಶದ ಬೀಜಗಳನ್ನು ಬಿತ್ತಾಗಿದ್ದು ಅದೀಗ ಮೊಳಕೆಯೊಡೆಯುತ್ತಿದೆ. ನಿಮ್ಮ ಮನಸಲಷ್ಟು ಜಾಗ ಕೊಡಿಶಾಂತಿ ಬೀಜಗಳ ಊರಿ ಸಂಭ್ರಮಿಸುವೆಎನ್ನುವ ಕವಿಯ ಮಾತುಗಳಲ್ಲಿರುವ ನಿಜಾಯತಿಯನ್ನು ಗುರುತಿಸಬೇಕು. ಶಾಂತಿ ಬೀಜಗಳು ಚಿಗುರೊಡೆಸಲು ಕವಿ ಕಾತರರರಾಗಿದ್ದಾರೆ. ಇಂದಿನ ತುರ್ತು ಅಗತ್ಯವೂ ಅದೇ ಆಗಿದೆ. ತೂರಿಬಿಟ್ಟಿ ಕನಸುಗಳ ಕಟ್ಟಲಾದರೂಹರಿದ ಸೂತ್ರಗಳಿಗೆಜಗದ ಬಂಧುತ್ವವೇ ಬೆಸುಗೆಯಾಗಲಿಜಗವು ಪ್ರೀತಿ ಎನ್ನುವ ಬಂಧನದಲ್ಲಿ ಬಂಧಿಯಾಗಲಿ ಹರಿದು ಹೋದ ಸೂತ್ರ ಒಗ್ಗೂಡಲಿ, ದೇಶ, ಮನಸ್ಸುಗಳಲ್ಲವೂ ಸುಭದ್ರವಾಗಲಿ.ವಿಶ್ವಭ್ರಾತ್ರತ್ವದ ನೆಲೆಯಲ್ಲಿ ಪ್ರಕಾಶ ಖಾಡೆಯವರ ಕವನಗಳನ್ನಿಟ್ಟು ನೋಡಬೇಕು. ಇಲ್ಲಿ ಮುಖ್ಯವಾಗಿ ಗಮನ ಸೆಳೆಯುವುದು ಕವಿತೆಗಳ ಸರಳತೆ ಮತ್ತು ಅದನ್ನು ವ್ಯಕ್ತಪಡಿಸಿರುವ ರೀತಿ. ಎಲ್ಲಿಯೂ ಶಬ್ಧಭಾರದಿಂದ ಕವಿತೆ ಕುಗ್ಗಿ ಹೋಗಿಲ್ಲ. ದೊಡ್ಡದೊಡ್ಡ ರೂಪಕಗಳಿಂದ ನುಲುಗಿಲ್ಲ. ಪಂಡಿತರನ್ನು ಮೆಚ್ಚಿಸಲೇಬೇಕೆಂಬ ಘನಂಧಾರಿ ಉದ್ದೇಶವೂ ಅವರಿಗಿಲ್ಲ. ಆನು ಒಲಿದಂತೆ ಹಾಡುವೆ ಎಂಬ ಭಾವವಿದೆ. ಆದರೆ ಇಡೀ ಸಂಕಲನವಾಗಿ ಓದಿದಾಗ ಭಾವಗಳು ಮತ್ತೆ ಮತ್ತೆ ಪುನರಾವರ್ತನೆಯಾದಮತೆ ತೋರುವ ಅಪಾಯವನ್ನು ಇಲ್ಲಿ ಅಲ್ಲಗಳೆಯುವಂತಿಲ್ಲ. ಮೊದಲ ಕವನದ ಭಾವವೇ ಮುಂದುವರೆಯುತ್ತ ಹೋದಂತೆ ಕೆಲವೊಮ್ಮೆ ಭಾಸವಾಗಿ ಖಂಡಕಾವ್ಯವನ್ನು ಓದುತ್ತಿರುವ ಏಕತಾನತೆಯನ್ನು ನೀಡಿಬಿಡುವ ಅಪಾಯವೂ ಇದೆ. ಆದರೂ ಸರಳ ಹಾಗೂ ಸುಮದರ ಅನುಭವವನ್ನು ನೀಡುವುದರಲ್ಲಿ ಸಂಶಯವಿಲ್ಲ. ********************* ಲೇಖಕರ ಬಗ್ಗೆ ಎರಡು ಮಾತು:ಕವಯತ್ರಿ ಶ್ರೀದೇವಿ ಕೆರೆಮನೆ ಪ್ರೌಢಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕಿ. ಇವರ ಹದಿಮೂರು ಪುಸ್ತಕಗಳು ಪ್ರಕಟಗೊಂಡಿವೆ. ಓದು ಮತ್ತು ಬರಹ ಇವರ ಹವ್ಯಾಸಗಳು

ಶಬ್ಧಭಾರವಿಲ್ಲದ ಮನದ ಮಾತುಗಳು Read Post »

ಅಂಕಣ ಸಂಗಾತಿ, ಸಂಪ್ರೋಕ್ಷಣ

ಬೆಳಗಾಗ ನಾನೆದ್ದು ಯಾರ್‍ಯಾರ ನೆನೆಯಲಿ ಅಂಕಣ ಬರಹ ಬೆಳಗು ಎನ್ನುವುದೊಂದು ಸುಂದರ ಅನುಭೂತಿ. ಮನೆಯ ಮಾಳಿಗೆಯ ಗಾಜಿನ ಹಂಚಿನಿಂದಲೋ, ಅಪಾರ್ಟ್ಮೆಂಟಿನ ಬಾಲ್ಕನಿಯ ಬಾಗಿಲಿನಿಂದಲೋ, ರಾತ್ರಿಪಾಳಿ ಮುಗಿಸಿ ಮರಳುತ್ತಿರುವ ಕ್ಯಾಬ್ ನ ಕಿಟಕಿಯಿಂದಲೋ ಸಿಕ್ಕಿದ ಅವಕಾಶಗಳನ್ನೆಲ್ಲ ಬಳಸಿಕೊಂಡು ಹುಟ್ಟುವ ಬೆಳಗು ಹೊಸದಿನವೆನ್ನುವ ಹೊಸ ಚೈತನ್ಯವನ್ನು ದೊರಕಿಸಿಕೊಡುತ್ತದೆ. ತುಳಸಿಕಟ್ಟೆಯ ಹೊಸಮಣ್ಣಿನಲ್ಲಿ ಉರಿಯುತ್ತಿರುವ ಅಗರಬತ್ತಿಯ ಪರಿಮಳ ರಸ್ತೆ ದಾಟಿದರೆ, ರಸ್ತೆಯ ತುದಿಯಲ್ಲಿರುವ ಟೀ ಅಂಗಡಿಯ ಘಮ ಮೇನ್ ರೋಡನ್ನು ತಲುಪುತ್ತದೆ; ಬಸ್ ಸ್ಟ್ಯಾಂಡ್ ನಿಂದ ಹೊರಡಲು ರೆಡಿಯಾದ ಬಸ್ಸಿನೊಳಗೆ ಮಲ್ಲಿಗೆಮಾಲೆ ಬಳುಕುವಾಗ, ತಳ್ಳುಗಾಡಿಯ ಮೇಲೆ ಕೆಂಪು-ಹಳದಿ ಸೇವಂತಿಗೆಗಳು ತೂಕಕ್ಕೆ ದೊರಕುತ್ತವೆ; ಪುಟ್ಟ ಮಗುವೊಂದು ಶೂಲೇಸ್ ಕಟ್ಟಿಕೊಳ್ಳಲು ಕಲಿಯುವ ಹೊತ್ತು, ಜಿಮ್ ನಲ್ಲೊಬ್ಬ ಹುಡುಗ ಮ್ಯೂಸಿಕ್ ಗೆ ತಕ್ಕಂತೆ ಹೆಜ್ಜೆ ಹಾಕುತ್ತಾನೆ; ರಾತ್ರಿ ಟ್ರೇನ್ ನಲ್ಲಿ ಅರೆಬರೆ ನಿದ್ರೆಯಲ್ಲಿಯೇ ಊರು ತಲುಪಿದ ಜೀನ್ಸ್ ತೊಟ್ಟ ಹುಡುಗಿ ತಾಮ್ರದ ಹಂಡೆಯ ಹದವಾದ ಬಿಸಿನೀರಿನಲ್ಲಿ ಫೇಷಿಯಲ್ ಮಾಡಿದ ಮುಖವನ್ನು ತೊಳೆದು, ಅಮ್ಮ ಹೊಲಿದ ಕೌದಿಯ ಮೇಲೆ ಮಲಗಿ ಸುಖವಾಗಿ ನಿದ್ರಿಸುತ್ತಾಳೆ; ಅಂಗಳದಲ್ಲೊಂದು ದಾಸವಾಳ ಸದ್ದಿಲ್ಲದೆ ಅರಳಿ, ಹುಟ್ಟಿದ ಪ್ರತಿ ಬೆಳಗಿಗೂ ಇನ್ನಷ್ಟು ಸೌಂದರ್ಯವನ್ನು ಒದಗಿಸುತ್ತದೆ.           ಈ ಸೌಂದರ್ಯದ ಪರಿಕಲ್ಪನೆಯೇ ವಿಶಿಷ್ಟವಾದದ್ದು. ಕಥೆ-ಕಾದಂಬರಿಗಳ ನಾಯಕಿಯ ಹೆರಳು, ಕವಿಯ ಕಲ್ಪನೆಯಲ್ಲಿ ತೂಗುವ ಮರ-ಗಿಡಗಳು, ಸಿನೆಮಾವೊಂದರ ಸುಖಾಂತ್ಯವಾಗುವ ಪ್ರೇಮ, ಪಾತ್ರೆ ತೊಳೆಯುತ್ತ ಅಮ್ಮ ಹಾಡುವ ಮಂಗಳಗೌರಿ ವ್ರತದ ಹಾಡು, ತೋಟದ ಅಂಚಿನಲ್ಲಿ ಹೂವರಳಿಸಿ ನಿಲ್ಲುವ ಸಂಪಿಗೆಮರ, ಶಾಪಿಂಗ್ ಮಾಲ್ ನ ಮೂಲೆಯ ಪುಟ್ಟ ಅಂಗಡಿಯ ಬಣ್ಣಬಣ್ಣದ ಐಸ್ ಕ್ರೀಮು ಎಲ್ಲವೂ ಸೇರಿ ಸೃಷ್ಟಿಯಾಗುವ ಸೌಂದರ್ಯದ ಪರಿಕಲ್ಪನೆ ಕಾಲಕ್ಕೆ ತಕ್ಕಂತೆ ಪೋಷಾಕು ಧರಿಸುತ್ತದೆ. ಕಪ್ಪು-ಬಿಳುಪು ಭಾವಚಿತ್ರದ ಉದ್ದ ಜಡೆಯೊಂದು ಸೆಲ್ಫಿಯ ಫ್ರೆಂಚ್ ಪ್ಲೇಟ್ ಆಗಿ ಬದಲಾದರೆ, ಹೆರಳಿನ ಸೌಂದರ್ಯವನ್ನು ಪರಿಪೂರ್ಣಗೊಳಿಸುತ್ತಿದ್ದ ಕೆಂಪುಗುಲಾಬಿಯ ಜಾಗವನ್ನು ರೆಡ್ ಸ್ಟ್ರೀಕ್ಸ್ ತನ್ನದಾಗಿಸಿಕೊಳ್ಳುತ್ತದೆ; ಜೋಕಾಲಿಯಾಗಿ ತೂಗುತ್ತಿದ್ದ ಮರ-ಗಿಡಗಳನ್ನು ಅಮ್ಯೂಸ್ಮೆಂಟ್ ಪಾರ್ಕಿನ ರೋಲರ್ ಕೋಸ್ಟರ್ ಗಳು ರಿಪ್ಲೇಸ್ ಮಾಡುತ್ತವೆ; ಪ್ರೇಮಕ್ಕೊಂದು ಹೊಸ ವ್ಯಾಖ್ಯಾನ ಬರೆಯುವಂತೆ ಲಿವಿನ್ ಸಂಬಂಧಗಳು ಹುಟ್ಟಿಕೊಳ್ಳುತ್ತವೆ. ಆದರೂ ಪಾತ್ರೆಯೊಂದಿಗೆ ಸದ್ದುಮಾಡುವ ಹಸಿರು ಚಿಕ್ಕಿಬಳೆಯ ಅಂದವಾಗಲೀ, ಗಾಳಿಯೊಂದಿಗೆ ಮನೆಯಂಗಳವನ್ನು ತಲುಪುವ ಸಂಪಿಗೆಯ ಪರಿಮಳವಾಗಲೀ, ಎರಡೂ ಕೈಗಳಿಂದ ಕೋನ್ ಐಸ್ ಕ್ರೀಮ್ ಹಿಡಿದು ಪುಟ್ಟ ಅಂಗಡಿಯಿಂದ ಹೊರಬರುವ ಪುಟ್ಟ ಮಗುವಿನ ಮುಗ್ಧತೆಯಾಗಲೀ ಎಂದಿಗೂ ಮಾಸುವುದಿಲ್ಲ.           ಹೀಗೆ ಸೌಂದರ್ಯ ಎನ್ನುವುದು ಮುಗ್ಧತೆಯಾಗಿ, ಹೆಣ್ಣಾಗಿ, ಪ್ರೇಮವಾಗಿ, ಭಕ್ತಿಯಾಗಿ, ಪ್ರಕೃತಿಯಾಗಿ ಬೆಳಗು ಎನ್ನುವ ಬೆರಗಿನೊಂದಿಗೆ ನಮ್ಮೆದುರು ತೆರೆದುಕೊಳ್ಳುತ್ತದೆ. ಸಾಮಾನ್ಯವಾಗಿ ಮುಂಜಾವಿನ ಕ್ರಿಯೆ-ಪ್ರಕ್ರಿಯೆಗಳೆಲ್ಲ ಒಂದು ಅವಸರದ ದಿನಚರಿಯೊಂದಿಗೆ ಹಾಜರಾಗುತ್ತವೆ. ಶಾಲೆಗೆ ಹೋಗುವ ದಿನಗಳಲ್ಲಿ ತಿಂಡಿ ಮಾಡುವ ತರಾತುರಿಯಲ್ಲಿರುತ್ತಿದ್ದ ಅಮ್ಮ ಅಡುಗೆಮನೆಯಿಂದಲೇ ಶಾಲೆಯನ್ನು ನೆನಪಿಸಿದರೆ, ಬೆಚ್ಚಗೆ ಕಂಬಳಿ ಹೊದ್ದು ಮಲಗಿರುತ್ತಿದ್ದ ನಾನು ಶಾಲೆಯನ್ನೂ ಬೆಳಗನ್ನೂ ಬೈದುಕೊಳ್ಳುತ್ತಲೇ ಎದ್ದೇಳುತ್ತಿದ್ದೆ. ವರ್ಷದ ಏಳೆಂಟು ತಿಂಗಳುಗಳು ಚಳಿಯ ವಾತಾವರಣವಿರುತ್ತಿದ್ದ ಮಲೆನಾಡಿನ ಮುಂಜಾವಿಗೆ ಬಚ್ಚಲೊಲೆಯ ಬೆಂಕಿ ಒಂದು ಸಂಭ್ರಮದ ಸಂಗತಿಯಾಗಿತ್ತು. ಒಣಗಿದ ಅಡಕೆಯ ಹಾಳೆ, ತೆಂಗಿನಕಾಯಿಯ ಸಿಪ್ಪೆ, ಕರಟಗಳೆಲ್ಲ ಬೇಸರವಿಲ್ಲದೆ ಉರಿಯುತ್ತ ಬೆಳಗುಗಳನ್ನು ಬೆಚ್ಚಗಿಡುತ್ತಿದ್ದವು. ಜಗಲಿಯ ಮಂಚ, ಕಪಾಟು, ಆರಾಮಕುರ್ಚಿಗಳ ನಡುವೆ ಅಡಗಿರುತ್ತಿದ್ದ ಧೂಳನ್ನು ಗುಡಿಸಿ ತೆಗೆದು, ಬಕೆಟಿನ ಬಿಸಿನೀರಿನಲ್ಲಿ ಅದ್ದಿತೆಗೆದ ಬಟ್ಟೆಯಿಂದ ಅಳಿದುಳಿದ ಧೂಳನ್ನೂ ಒರೆಸಿದ ಮೇಲೆ ಬೆಳಗನ್ನು ಸ್ವಾಗತಿಸಲಿಕ್ಕೆ ಜಗಲಿ ರೆಡಿಯಾಗುತ್ತಿತ್ತು. ಸುಂದರವಾದ ಕೆತ್ತನೆಯ ಮರದ ಬಾಗಿಲು-ಕಂಬಗಳ ಸುತ್ತ ಪುಟ್ಟಪುಟ್ಟ ಹೂಗಳ ರಂಗೋಲಿಯನ್ನು ಬಿಡಿಸಿ, ಅದಕ್ಕೊಪ್ಪುವ ಕೆಂಪು ಹಳದಿ ಗುಲಾಬಿ ಬಣ್ಣಗಳನ್ನು ತುಂಬಿ, ನಡುನಡುವೆ ಆಗತಾನೇ ಅರಳಿದ ಮೋತಿಮಲ್ಲಿಗೆ ಶಂಖಪುಷ್ಪ ದಾಸವಾಳಗಳನ್ನಿಟ್ಟರೆ ಜಗಲಿಗೊಂದು ತನ್ನದೇ ಆದ ಸೌಂದರ್ಯ ಪ್ರಾಪ್ತಿಯಾಗುತ್ತಿತ್ತು. ಪಕ್ಕದಮನೆಯ ಮಗುವೊಂದು ಅಂಬೆಗಾಲಿಡುತ್ತ ಬಂದು ಹೂವಿನ ಎಸಳುಗಳನ್ನೆಲ್ಲ ಕೀಳುತ್ತ, ತನ್ನ ಪುಟ್ಟಪುಟ್ಟ ಬೆರಳುಗಳಿಂದ ರಂಗೋಲಿಯ ಹೂವುಗಳ ಆಕಾರಗಳನ್ನು ಬದಲಾಯಿಸುವ ಸುಂದರ ನೋಟಕ್ಕೆ ಬೆಳಗು ಸಾಕ್ಷಿಯಾಗುತ್ತಿತ್ತು.           ಹೀಗೆ ಬಚ್ಚಲೊಲೆಯ ಹದವಾದ ಬಿಸಿಯಂತೆ ಹರಡಿಕೊಳ್ಳುವ ಬೆಳಗು ಬಾಳೆಎಲೆಯ ಹಸಿರಾಗಿ, ತುಪ್ಪದ ತಿಳಿಹಳದಿಯಾಗಿ, ಜೋನಿಬೆಲ್ಲ-ಮಿಡಿಉಪ್ಪಿನಕಾಯಿಗಳ ಕೆಂಪು ಬಣ್ಣವಾಗಿ ಮುದ ನೀಡುತ್ತ ಯುನಿಫಾರ್ಮಿನ ನೀಲಿಯಾಗಿ ಶಾಲೆಯನ್ನು ತಲುಪುತ್ತಿತ್ತು. ಕಾಲ್ನಡಿಗೆಯ ಕಷ್ಟವನ್ನು ದೂರಗೊಳಿಸಲೆಂದೇ ಹುಟ್ಟಿದಂತೆ ಗೋಚರಿಸುತ್ತಿದ್ದ ಮಾವಿನಮರಗಳು ದಾರಿಯುದ್ದಕ್ಕೂ ಹಣ್ಣುಗಳನ್ನು ಉದುರಿಸುತ್ತಿದ್ದವು; ಬೆಟ್ಟದ ಮೇಲೊಂದಿಷ್ಟು ನೆಲ್ಲಿಕಾಯಿಗಳು ನಮಗಾಗಿಯೇ ಕಾದಿರುತ್ತಿದ್ದವು; ಕಾಸು ಕೊಟ್ಟು ಕೊಂಡುಕೊಳ್ಳಲಾಗದ ಅದೆಷ್ಟೋ ಬಗೆಯ ಹಣ್ಣು-ಕಾಯಿಗಳೆಲ್ಲ ವರ್ಷದುದ್ದಕ್ಕೂ ಪಾಟಿಚೀಲ ಸೇರುತ್ತಿದ್ದವು; ಮಳೆಗಾಲದಲ್ಲಿ ಹುಟ್ಟಿದ ಒರತೆಯೊಂದು ಮಳೆ ನಿಂತಮೇಲೂ ಚಿಮ್ಮುತ್ತ ಬೆಳಗಿನ ಪಯಣವನ್ನು ಸುಂದರವಾಗಿಸುತ್ತಿತ್ತು. ಈ ಎಲ್ಲ ದಿವ್ಯತೆಯ ಅನುಭೂತಿಗಳಿಗೆ ಎದುರಾಗುತ್ತಿದ್ದ ದಿನಗಳಲ್ಲಿ ಮಳೆಯ ನೀರು ಸ್ಕರ್ಟನ್ನು ಒದ್ದೆಯಾಗಿಸುವ ಕಷ್ಟವಾಗಲೀ, ಚಳಿಗಾಲದಲ್ಲಿ ಕೈ-ಕಾಲುಗಳು ಬಿರುಕುಬಿಡುವ ನೋವಾಗಲೀ, ಬಿಸಿಲುಗಾಲದ ಬಾಯಾರಿಕೆ ಸನ್ ಬರ್ನ್ ಗಳಾಗಲೀ, ಪಾಟಿಚೀಲದ ಭಾರವಾಗಲೀ ಯಾವುದೂ ಬಾಧಿಸಲೇ ಇಲ್ಲ. ಸೂರ್ಯ ಹುಟ್ಟುತ್ತಿದ್ದಂತೆಯೇ ತನ್ನ ಬಳಗವನ್ನೆಲ್ಲ ಕರೆದು ಪಾತ್ರೆ ತೊಳೆಯುವ ಜಾಗದಲ್ಲಿ ಅನ್ನದ ಕಾಳನ್ನು ಹೆಕ್ಕುತ್ತಿದ್ದ ಕಾಗೆ ಸಹಬಾಳ್ವೆಯ ಸೊಗಸನ್ನು ತೋರಿಸಿಕೊಟ್ಟರೆ, ಪಾತ್ರೆ ತುಂಬುವಷ್ಟು ಹಾಲು ಕೊಡುತ್ತಿದ್ದ ಹಸು ಪರೋಪಕಾರದ ಪಾಠವನ್ನು ಕಲಿಸಿತು; ದಿನ ಬೆಳಗಾದರೆ ಒಲೆಯಲ್ಲಿ ಉರಿಯುತ್ತಿದ್ದ ಕರಟದಲ್ಲಿ ತ್ಯಾಗದ ಭಾವನೆ ಕಾಣಿಸಿದರೆ, ಅಂಗಳದ ಕಂಬಕ್ಕೆ ಹಬ್ಬಿ ಹೂವರಳಿಸುತ್ತಿದ್ದ ಶಂಖಪುಷ್ಪದ ಬಳ್ಳಿ ಎಲ್ಲ ತೊಡಕುಗಳನ್ನು ಮೀರಿ ಬೆಳಕಿನೆಡೆಗೆ ಸಾಗುವ ದಾರಿಯನ್ನು ತೋರಿಸಿತು.           ಹೀಗೆ ಬದುಕಿನ ತೊಡಕುಗಳೆಲ್ಲವನ್ನೂ ಎದುರಿಸುವ ಶಕ್ತಿಯೊಂದನ್ನು ಬೆಳಗು ತನ್ನೆಲ್ಲ ಚಟುವಟಿಕೆಗಳಿಂದಲೇ ಕಲಿಸಿಕೊಟ್ಟಿತು. ಅಮ್ಮ ಅಡುಗೆಮನೆಯಿಂದಲೇ ವಿಶಿಷ್ಟವಾಗಿ ಗುಡ್ ಮಾರ್ನಿಂಗ್ ಹೇಳುತ್ತಿದ್ದ ರೀತಿ ಮೊಬೈಲ್ ನಲ್ಲಿರುವ ಅಲಾರ್ಮ್ ಗೆ ಶಿಫ್ಟ್ ಆಯಿತು; ಹದವಾದ ಬಿಸಿನೀರಿನೊಂದಿಗೆ ಬೆಳಗನ್ನು ಸ್ವಾಗತಿಸುತ್ತಿದ್ದ ತಾಮ್ರದ ಹಂಡೆಯನ್ನು ಗೀಸರ್ ರಿಪ್ಲೇಸ್ ಮಾಡಿತು; ಕಂಬವನ್ನು ತಬ್ಬಿ ಬೆಳೆಯುತ್ತಿದ್ದ ಶಂಖಪುಷ್ಪದ ಬಳ್ಳಿ ಬಾಲ್ಕನಿಯ ಸರಳುಗಳನ್ನು ಆಶ್ರಯಿಸಿತು. ಬೆಳಗಾದರೆ ತುಂಬುತ್ತಿದ್ದ ಹಾಲಿನ ಚೊಂಬಿನ ಜಾಗವನ್ನು ವಿವಿಧ ಬಣ್ಣ-ಸೈಜುಗಳ ಪ್ಯಾಕೆಟ್ಟುಗಳು ಆಕ್ರಮಿಸಿಕೊಂಡವು. ದಾರಿಯಂಚಿನ ಒರತೆ, ಬಚ್ಚಲೊಲೆಯ ಬೆಂಕಿ, ಪಾಟಿಚೀಲದ ಸಾಂಗತ್ಯ ಎಲ್ಲವೂ ಸಲೀಸಾಗಿ ರೂಪಾಂತರಗೊಂಡು ನೆನಪಿನ ಅಂಗಳಕ್ಕೂ ಬೆಳಗಿನ ಸೌಂದರ್ಯವನ್ನು ಒದಗಿಸಿಕೊಟ್ಟವು. ಕಾಲಕಾಲಕ್ಕೆ ಅಗತ್ಯಕ್ಕೆ ಅನುಗುಣವಾಗಿ ಸ್ವರೂಪ ಬದಲಾಯಿಸಿಕೊಂಡ ಬೆಳಗು ನೆನಪಾಗಿ, ಜೀವನಪಾಠವಾಗಿ, ಜೀವಂತಿಕೆಯ ಚಲನೆಯಾಗಿ, ಸುಂದರ ಅನುಭೂತಿಯಾಗಿ ಬದುಕುಗಳನ್ನು ಸಲಹುತ್ತಲೇ ಇರುತ್ತದೆ. ಬೆಟ್ಟದಲ್ಲಿ ಹುಟ್ಟಿದ ಒರತೆಯೊಂದು ಬಾಲ್ಕನಿಯ ಶಂಖಪುಷ್ಪದ ಬಳ್ಳಿಯೆಡೆಗೆ ಹರಿದು ಸುಂದರವಾದ ಹೂವುಗಳನ್ನು ಅರಳಿಸುತ್ತದೆ. **************************** ಲೇಖಕರ ಬಗ್ಗೆ ಎರಡು ಮಾತು: ಮೂಲತ: ಉತ್ತರ ಕನ್ನಡದವರಾದ ಅಂಜನಾ ಹೆಗಡೆಯವರು ಸದ್ಯ ಬೆಂಗಳೂರಲ್ಲಿ ನೆಲೆಸಿರುತ್ತಾರೆ. ‘ಕಾಡ ಕತ್ತಲೆಯ ಮೌನ ಮಾತುಗಳು’ ಇವರು ಪ್ರಕಟಿಸಿದ ಕವನಸಂಕಲನ.ಓದು ಬರಹದ ಜೊತೆಗೆ ಗಾರ್ಡನಿಂಗ್ ಇವರ ನೆಚ್ಚಿನ ಹವ್ಯಾಸ

Read Post »

You cannot copy content of this page

Scroll to Top