ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅನುವಾದ

ನಿನ್ನನಾ ಹೋಲಿಸಲೆ ಮಧುವಸಂತ ಬೇಸಿಗೆಗೆ?

ಅನುವಾದಿತ ಕವಿತೆ ಮೂಲ: ವಿಲಿಯಂ ಷೇಕ್ಸ್ ಪಿಯರ್ ಕನ್ನಡಕ್ಕೆ:ವಿ.ಗಣೇಶ್ ನಿನ್ನನಾ ಹೋಲಿಸಲೆ ಮಧು ವಸಂತ ಬೇಸಿಗೆಗೆ? ಅದಕಿಂತ ಮಿಗಿಲಾದ ಸ್ಥಿತಪ್ರಜ್ಞ ಸುಂದರನು ನೀನು ಬೇಸಿಗೆಯ ಬಿರುಗಾಳಿಗೆ ಮೊಗ್ಗು ಮುದುಡಬಹುದು ಮಳೆಗಾಲದ ಆರ್ಭಟಕೆ ವಸಂತ ನಾಶಿಸಬಹುದು ಕೆಲವೊಮ್ಮೆ ಸೂರ್ಯನೂ ಉರಿಗಣ್ಣ ಬಿಡಬಹುದು ಬಂಗಾರದ ಕಾಂತಿಯು ಮಸುಕು ಮಸುಕಾಗಬಹುದು  ಆ ಪ್ರಕೃತಿಯ ಕೋಪಕ್ಕೆ ಕಾಲಚಕ್ರದ ಏರಿಳಿತಗಳಿಗೆ ಚೆಲುವರಲಿ ಚೆಲುವನೂ ಸಹ ಕಳೆಗುಂದಬಹುದು. ಆದರೆ ಚೆಲುವರಲಿ ಚೆಲುವಾದ ಈ ನಿನ್ನ ಚೆಲುವು ಎಂದೆಂದೂ ಮಾಸದೆ ಚಿರವಾಗಿ ಉಳಿಯುವುದು  ನಾಶವಾಗದೆ ಅದು ಚಿಗುರೊಡೆದು ಬೆಳೆಯುವುದು ಬೆಳೆಯುತ್ತ ಬೆಳೆಯುತ್ತ ಹೆಮ್ಮರವಾಗಿ ಹರಡುವುದು  ನಯನಗಳ ನೋಟ ಕಿವಿಗಳ ಶ್ರವಣ ಉಳಿದಿರುವವರೆಗೆ ಉಳಿವ ಈ ಕಾವ್ಯವು ನೀಡುವುದು ನಿನಗೆ ಅಮರತ್ವವನು

ನಿನ್ನನಾ ಹೋಲಿಸಲೆ ಮಧುವಸಂತ ಬೇಸಿಗೆಗೆ? Read Post »

ಕಾವ್ಯಯಾನ

ಪ್ರೀತಿಯ ಸಾಲುಗಳು

ಕವಿತೆ ಬಾಲಕೃಷ್ಣ ದೇವನಮನೆ ಮುಗುಳು ನಗೆಯಲ್ಲಿಹದಗೊಳಿಸಿದಎದೆಯ ಹೊಲದಲ್ಲಿಒಂದೊಂದೇವಾರೆ ನೋಟದಲಿನಾಟಿ ಮಾಡಿದ ಪೈರುತೊನೆದಾಡಿದ ಮಧುರ ಕ್ಷಣ..! ಪ್ರೀತಿಯನ್ನುಮುಲಾಜಿಲ್ಲದ ಹಾಗೆಅವಳು ಒದ್ದು-ಹೋದ ಎದೆಯ ದಾರಿಯಲ್ಲಿಮೂಡಿದ ನೋವಿನ ಹೆಜ್ಜೆಗಳುಯಾವ ಮುಲಾಮಿಗೂಅಳಿಸಲಾಗದೇ ಸೋತರೂಮತ್ತೆ ಮತ್ತೆ ನೆನಪ ಲೇಪಿಸಿಕೊಂಡುಸುಖಿಸುವ ವ್ಯಸನಿ ನಾನು. ಮನಸ್ಸುಗಳು ಉರಿಯುವಈ ರಾತ್ರಿಯಲ್ಲಿಬೀಸುವ ಗಾಳಿಯೂಬೆಂಕಿ ನಾಲಿಗೆ ಸವರುವಾಗಇಷ್ಟಿಷ್ಟೇ… ಇಷ್ಟಿಷ್ಟೇ…ಜಾರಿದ ಗಳಿಗೆಸುಟ್ಟ ನಿದಿರೆಯನ್ನೆಲ್ಲಾಹಗಲಿಗೆ ಗುಡ್ಡೆ ಹಾಕಿದಎಚ್ಚರದ ಬೂದಿಯಲ್ಲಿರೆಪ್ಪೆ ಮುಚ್ಚದ ಇರುಳುಉದುರಿಸಿದ ಕಂಬನಿಒದ್ದೆ ಮಾಡಿದಎದೆಯ ರಂಗಸ್ಥಳದಲ್ಲಿನಿನ್ನ ನೆನಪುಗಳ ಹೆಜ್ಜೆ ಹೂತುಚುಚ್ಚಿ ಚುಚ್ಚಿ ಕೊಲ್ಲುವ ಸಂತಾಪ…!! ನೀನುಹುಕ್ಕುಂ ಕೊಟ್ಟ ಮೇಲೇನಾನುನಿನ್ನೊಲವ ಗದ್ದೆಯಲಿ ಹೆಜ್ಜೆ ಊರಿದ್ದುಮತ್ಯಾಕೆ ಸುಳ್ಳು ಪ್ರಕರಣನನ್ನ ಮೇಲೆನಾನೇ ಅತಿಕ್ರಮಣ ಮಾಡಿದೆನೆಂದು? ******************************

ಪ್ರೀತಿಯ ಸಾಲುಗಳು Read Post »

ಕಾವ್ಯಯಾನ

ನನಗೂ ನಿನ್ನಂತಾಗ ಬೇಕಿತ್ತು!

ಕವಿತೆ ಅನಿತಾ ಪಿ. ತಾಕೊಡೆ ನನಗೂ ನಿನ್ನಂತಾಗಬೇಕಿತ್ತುಅದೆಷ್ಟೋ ಸಲ ನಾನೂ ನಿನ್ನಂತಾಗಲು…ಎದೆಯಾಳದ ಕನಸಿನ ಕಣ್ಣಿಗೆಕಪ್ಪು ಪಟ್ಟಿ ಬಿಗಿಯುತಿದ್ದೆತೀವ್ರವಾದ ಭಾವಗಳು ಎಲ್ಲೆ ಮೀರದಂತೆಇತಿಮಿತಿಯ ರೇಖೆಯನೆಳೆಯುತಿದ್ದೆ ಕೆಲವೊಮ್ಮೆ ಮಾತುಗಳು ಹಳಿ ತಪ್ಪಿದಾಗಕರಾಳ ಮೌನ ಎದೆಯನ್ನು ಸುಡುತಿತ್ತುಅಭದ್ರತೆಯ ನೆಲೆಯೊಳಗೆ ಓಲಾಡಿಸುತಿತ್ತು ಅಂದುಕೊಂಡಂತೆ ಇರಲಾಗದೆಸಣ್ಣ ತಪ್ಪು ವಿರಾಟ ರೂಪ ತಳೆದುಮೂರ್ತರೂಪಕ್ಕಿಳಿಸುವ ಛಲದಿನಕಳೆದಂತೆ ಇಳಿಯುತ್ತಲೇ ಇತ್ತು ನಿನ್ನ ಸಖ್ಯವಾದ ಮೇಲೆನಾನೆನುವ ಅಹಂಭಾವ ಬಿಗುಮಾನಎಲ್ಲವೂ ದೂರ ಸರಿದುನಿನ್ನ ಅನುನಯದೊಳು ಹೂವಾಗಿದ್ದು ಸುಳ್ಳಲ್ಲ ಬೇಕು ಬೇಡಗಳ ನಡುವಿನ ಒಳಪಂಥದಲಿಅದೆಷ್ಟೋ ಬಾರಿ ನಾನೂ ನೀನೂಸೋತು ಗೆಲ್ಲುತಿದ್ದೆವು ಕೆಲವೊಮ್ಮೆ ಮಾತು ಮೌನಗಳ ಮಥನದಲಿವಿರಹದ ಅಲೆಗಳೆದ್ದು ನಲುಗಿ ಸುಸ್ತಾದಾಗನನಗೂ ನಿನ್ನಂತಾಗುವ ಹಂಬಲ ದಿನ ಕಳೆದಂತೆ ನೋಯಿಸುವ ಭಾವಗಳನ್ನೆಲ್ಲನಿರಾಕಾರಕ್ಕಿಳಿಸಿದೆನನಗೂ ನಿನ್ನಂತಾಗಬೇಕಿತ್ತುನನ್ನತನವನ್ನಾದರೂ ಉಳಿಸಿಕೊಳ್ಳುವಷ್ಟು ಈಗ ಕಳವಳವಿಲ್ಲಕಳುವಾಗುವ ಭಯವೂ ಇಲ್ಲಬಂದಂತೆ ಬದುಕನೊಪ್ಪಿಕೊಳ್ಳುವದಿಟ್ಟನಡೆ ನಿನ್ನಂತೆ… ನಾನಂದುಕೊಂಡಂತೆ *******************************

ನನಗೂ ನಿನ್ನಂತಾಗ ಬೇಕಿತ್ತು! Read Post »

ಕಾವ್ಯಯಾನ

ಕಲಿಗಾಲದ ಫಲ

ಕವಿತೆ ಅರುಣ್ ಕೊಪ್ಪ ಅಂದು ಖುಷಿಯನ್ನೆಲ್ಲ ಉಸುರಿಹಿಡಿದು ಮುಟ್ಟಿದ್ದಕ್ಕೂತಂತ್ರಜ್ಞಾನದ ಗುಲಾಬು ಜಾಮೂನಿನ ಚಪಲದಲ್ಲಿದ್ದೆವು.ಸ್ವಾರ್ಥದ ಕುದುರೆಯನ್ನೇ ಏರಿ ಸವಾರಿಕಾಂಚಾಣದ ಕರವಸ್ತ್ರವನ್ನೇ ಬಳಸುತ್ತಿದ್ದೆವು. ಪಾದ ಊರದ ನೆಲ ಮೌನದಲ್ಲಿಕಾಲು ದಾರಿಗಳನ್ನು ನುಂಗಿ ಹಾಕಿತ್ತುಬೀದಿ ದೀಪದಲ್ಲೂ ಕಣ್ಣು ಕಾಣದಮೋಜು ಮಸ್ತಿಯಲಿ ರಾತ್ರಿಯನ್ನುಹಗಲಿನಂತೆ ಅನುಭವಿಸುತ್ತಿದ್ದೆವು.ಸಮಯವನ್ನು ಹರಾಜು ಮಾಡಿಅಹಂ ಅಂಗಡಿಯಲ್ಲಿ ಮಾರಾಟಮಾಡುತ್ತಿದೆವು. ಹುಟ್ಟಿದ ಕಿಮ್ಮತ್ತಿಗೆ ಬೀದಿ ವಾಪಾರಿಗಳಮಂತ ಉರಿಸುತ್ತಿದ್ದೆವು.ನಾವೇ ಅನುಭೋಗಿಗಳುಎಂಬ ಸರ್ವ ಜಂಬದಲಿವೃದ್ಧರನ್ನು ಹೇಸಿಗೆಯಾಗಿ ನೋಡುತ್ತಿದ್ದೆವು. ವ್ಯಾಪಾರ ಜಗತ್ತಿನಲ್ಲಿಸಂಬಂಧಕ್ಕೂ ಮಾಪು ಹಿಡಿದುತಾವೇ ಸರಿ ಎಂದೆನುತಕಾಣುವ ಸೊಗದೊಳಗೆಭೂತಗನ್ನಡಿಯ ಹಿಡಿದುಮೊಸರಲ್ಲಿ ಕಲ್ಲು ಹುಡುಕುತ್ತಿದ್ದೆವು ಆದರೆ ಇಂದು ಎಲ್ಲಕಲಿಗಾಲದ ಫಲ ***********************

ಕಲಿಗಾಲದ ಫಲ Read Post »

ಅಂಕಣ ಸಂಗಾತಿ, ದಿಕ್ಸೂಚಿ

ಬಿಟ್ಟು ಬಿಡಿ ಹೋಲಿಕೆ ಬೆಳೆಸಿಕೊಳ್ಳಿ ಸ್ವಂತಿಕೆ

ಅಂಕಣ ‘ಪಕ್ಕದ ಮನೆ ಪದ್ಮ ಕೋಗಿಲೆ ತರ ಹಾಡುತ್ತಾಳೆ. ನೀನೂ ಇದ್ದಿಯಾ. ನಿನ್ನ ಗೆಳೆಯ ರವಿ ನೋಡು ಭಾಷಣ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದವರೆಗೂ ಬಹುಮಾನ ಪಡೆದಿದ್ದಾನೆ. ಹಾಡು ಭಾಷಣ ಇರದಿದ್ದರೆ ಅಷ್ಟೇ ಹೋಯ್ತು ರಜನಿ ತರಹ ಕ್ಲಾಸಿಗೆ ರ‍್ಯಾಂಕ್ ಬರೋಕೆ ಆಗಲ್ಲ ಯಾವಾಗ ನೋಡಿದರೂ ಮನೆ ಮುಂದೆ, ಮೈದಾನದಲ್ಲಿ ಕ್ರಿಕೆಟ್ ಬ್ಯಾಟ್ ಹಿಡಿದು ಆಡ್ತಿಯಾ ನಾಯಿ ಬಾಲ ಯಾವಾಗಲೂ ಡೊಂಕು ಅದನ್ನು ನೇರ ಮಾಡಲು ಸಾಧ್ಯವಿಲ್ಲ. ನಾ ಹೇಳಿದಾಗ ಮಾತ್ರ ಅಭ್ಯಾಸ ಮಾಡುತ್ತಿಯಾ.’ ಇದು ರಾಜುವಿನ ಅಪ್ಪ ಅವ್ವನ ಮಾತುಗಳು. ರಾಜುನಿಗೂ ಹೆತ್ತವರ ಮಾತುಗಳನ್ನು ಕೇಳಿ ಕೇಳಿ ರೋಸಿ ಹೋಗುತ್ತದೆ. ನಾನು ಆಟದಲ್ಲಿ ಮುಂದಿರೋದು ಇವರಿಗೆ ಕಾಣುವುದೇ ಇಲ್ಲ ಎಂದು ಗೊಣಗಿಕೊಳ್ಳುತ್ತಾನೆ. ಮನಃಸ್ಥಿತಿ ಸರಿ ಇರದಿದ್ದಾಗ ಹೌದಲ್ಲ ನನಗೆ ಚೆನ್ನಾಗಿ ಹಾಡೋಕೆ ಬರಲ್ಲ. ಭಾಷಣ ಮಾಡೋಕೆ ಬರಲ್ಲ. ಅಂಕ ಜಾಸ್ತಿ ಗಳಿಸಲು ಆಗಿಲ್ಲ. ನಾನು ಕೆಲಸಕ್ಕೆ ಬಾರದವನು ಎಂದೆನಿಸುತ್ತದೆ. ಇದು ಕೇವಲ ರಾಜುವಿನ ಆತಂಕದ ಸ್ಥಿತಿಯಲ್ಲ. ನಮ್ಮಲ್ಲಿ ಬಹುತೇಕ ಜನ ಪಾಲಕರ ಮತ್ತು ಮಕ್ಕಳ ಸಮಸ್ಯೆ. ಇತರರೊಂದಿಗಿನ ಹೋಲಿಕೆ ಬಹುತೇಕ ಸಲ ನೋವನ್ನೇ ತರುವುದು. ಹೋಲಿಕೆಯಿಂದ ಹೊರ ಬರುವುದು ಹೇಗೆ ಎಂಬುದು ಹಲವಾರು ಯುವಕ/ತಿಯರ ಸಮಸ್ಯೆ. ಹೋಲಿಕೆಯ ಕುಣಿಕೆಯಿಂದ ಬಚಾವಾಗಲು ಕೆಲವು ಸುಳಿವುಗಳು ಒಬ್ಬರಂತೆ ಒಬ್ಬರಿಲ್ಲ ನಮಗೆಲ್ಲ ಗೊತ್ತಿರುವ ಹಾಗೆ ಶಕ್ತಿಯಲ್ಲಿ ಅಶ್ವ ಶಕ್ತಿ ಪ್ರಸಿದ್ಧವಾದುದು.ಅದಕ್ಕೆ ಮರ ಹತ್ತುವ ಸ್ಪರ್ಧೆಯಲ್ಲಿ ಅದು ನಪಾಸಾಗುತ್ತದೆ. ಮೀನು  ಸಲೀಸಾಗಿ ಈಜುವುದು ಅದಕ್ಕೆ ಭೂಮಿಯ ಮೇಲೆ ಓಡುವ ಸ್ಪರ್ಧೆ  ಇಟ್ಟರೆ ಸತ್ತೇ ಹೋಗುತ್ತದೆ. ಪಶು ಪ್ರಾಣಿಗಳ ಹಾಗೆಯೇ ನಮ್ಮಲ್ಲಿಯೂ ಪ್ರತಿಯೊಬ್ಬರೂ ಒಂದೊಂದರಲ್ಲಿ ವಿಶೇಷ ಪ್ರತಿಭೆಯನ್ನು ಹೊಂದಿರುತ್ತೇವೆ. ಈಗಾಗಲೇ ಗೆಲುವು ಸಾಧಿಸಿದವರನ್ನು ಕಂಡು ಅವರಂತಾಗಲು ಹೋದರೆ ಅವರಿಗೆ ಹೋಲಿಸಿಕೊಂಡು ಕೀಳರಿಮೆಯಿಂದ ಬಳಲುತ್ತೇವೆ. ನಿಮ್ಮಲ್ಲಿರುವ ಶಕ್ತಿಯನ್ನು ಕಡೆಗಣಿಸುವುದು ದೊಡ್ಡ ತಪ್ಪು.ಜೀವನದ ಕೊನೆಯಲ್ಲಿ ಶಕ್ತಿಯ ಅರಿವಾದರೆ ನಿಷ್ಪ್ರಯೋಜಕ. ಹಾಗೇ ಯಾರನ್ನೂ ಕಡೆಗಣಿಸಬೇಡ.  ಕಬೀರರು ಹೇಳಿದಂತೆ,’ ಕಾಲ ಕೆಳಗಿರುವ ಕಡ್ಡಿಯನ್ನು ಕಡೆಗಣಿಸಬೇಡ. ಅದೇ ಹಾರಿ ಬಂದು ನಿನ್ನ ಕಣ್ಣಲ್ಲಿ ನೆಟ್ಟು ನೋವನ್ನುಂಟು ಮಾಡಬಹದು.’ ಮತ್ತೊಬ್ಬರ ನಕಲು ಮಾಡುವುದು ತರವಲ್ಲ. ಪ್ರತಿಯೊಬ್ಬರಿಗೂ ಪಂಚೇಂದ್ರಿಯಗಳಿವೆ. ಆದರೆ ಅವು ನೋಡಲು ಬೇರೆ ಬೇರೆಯೇ ಆಗಿವೆ. ಅಂದರೆ ಒಬ್ಬರಂತೆ ಒಬ್ಬರಿಲ್ಲ. ಹೀಗಾಗಿ ಪ್ರತಿಯೊಬ್ಬರಲ್ಲಿ ಹುದುಗಿರುವ ಪ್ರತಿಭೆಗಳು ಭಿನ್ನ ಭಿನ್ನ. ಎಂಬ ವಿಷಯವನ್ನು ಮನದಟ್ಟು ಮಾಡಿಕೊಂಡರೆ ಹೋಲಿಕೆಯಾಚೆ ಬರುವುದು ಸುಲಭ ಕೊರತೆಯ ಭಯ ಬೇಡ ಬೇರೆಯವರಲ್ಲಿರುವ ಪ್ರತಿಭೆ ನನ್ನಲ್ಲಿಲ್ಲ. ನನ್ನಲ್ಲಿ ಕೊರತೆಗಳ ಆಗರವೇ ಇದೆ. ಈ ಕೊರತೆಗಳ ಕಾರಣದಿಂದ ನನಗೇನೂ ಸಾಧಿಸಲಾಗುವುದಿಲ್ಲ ಎನ್ನುವ ಭ್ರಮೆಯಿಂದ ಹೊರ ಬನ್ನಿ. ಇತರರ ಜಾಣ್ಮೆ, ಸೌಂದರ್ಯ, ಸಿರಿವಂತಿಕೆಗೆ ಹೋಲಿಸಿಕೊಂಡು ಕೊರಗುವುದನ್ನು ನಿಲ್ಲಿಸಿ. ಇತರರಲ್ಲಿರುವುದು ಶ್ರೇಷ್ಟ. ನನ್ನಲ್ಲಿರುವುದು ಕನಿಷ್ಟ. ಎಂಬ ನಿರ‍್ಧಾರಕ್ಕೆ ಬರಬೇಡಿ. ನಮ್ಮ ನಮ್ಮ ಮನೋವೃತ್ತಿಯಂತೆ ನಮ್ಮ ಇಚ್ಛೆಗಳಿರುತ್ತವೆ.ಎನ್ನುತ್ತಾರೆ ಬಲ್ಲವರು.ಸುತ್ತ ಮುತ್ತ ಇರುವವರ ಅಭಿಪ್ರಾಯವನ್ನು ಮನ್ನಿಸಿ ಅದರಂತೆ ನಡೆಯದೇ ಹೋದರೆ ನನ್ನಲ್ಲಿರುವ ಕೊರತೆಯ ಕಂದಕ ಮುಚ್ಚಲಾಗುವುದಿಲ್ಲ. ಬೇರೆಯವರ ಮಾತಿನಂತೆ ನಡೆದುಕೊಂಡರೆ ಅದು ನಿಸ್ವಾರ‍್ಥ.ಕೊರತೆಯ ನೀಗಿಸಿಕೊಳ್ಳುವುದರಲ್ಲಿ ತೊಡಗಿಕೊಂಡರೆ ಅದು ಸ್ವಾರ್ಥ ಎಂಬ ತಪ್ಪು ಕಲ್ಪನೆಯಲ್ಲಿ ಕಾಲ ಕಳೆಯಬೇಡಿ. ‘ತನ್ನ ಹಿತವನ್ನು ನೋಡಿಕೊಳ್ಳುವುದು ಸ್ವಾರ‍್ಥವಲ್ಲ. ಇತರರ ಹಿತಕ್ಕೆ ದಕ್ಕೆ ತರುವುದೇ ಸ್ರ‍ಾರ್ಥ.’ ಎಂಬುದನ್ನು ಅರಿತು ಮುನ್ನಡೆಯಿರಿ. ಆಸಕ್ತಿ ಗುರುತಿಸಿಕೊಳ್ಳಿ ವಾತ್ಸಾಯನ ಮುನಿಯ ನುಡಿಯಂತೆ ‘ಒಂದೇ ಒಂದು ದೋಷವು ಎಲ್ಲ ಗುಣಗಳನ್ನು ಕೆಡಿಸಿಬಿಡುತ್ತದೆ.’ ಹೋಲಿಕೆಯಲ್ಲಿ ಬಿದ್ದು ಬಿಟ್ಟರೆ ನಮ್ಮೆಲ್ಲ ಸಾರ್ಥಕ್ಯ ಶಕ್ತಿ ವಿನಾಶವಾದಂತೆಯೇ ಸರಿ. ನಿಮಗೆ ಯಾವ ರಂಗದಲ್ಲಿ ಆಸಕ್ತಿ  ಇದೆ ಎಂಬುದನ್ನು ಗುರುತಿಸಿ. ಬಡತನದ ಕಾರಣದಿಂದ ಶಾಲಾ ಶಿಕ್ಷಣ ಪಡೆಯದ ಬಾಲಕನೊಬ್ಬ ಹೊಟ್ಟೆ ಪಾಡಿಗಾಗಿ ಬುಕ್ ಬೈಂಡಿಂಗ್ ಕೆಲಸ ಮಾಡುತ್ತಿದ್ದ. ಬೈಂಡಿಂಗಿಗೆ ಬಂದ ಪುಸ್ತಕಗಳನ್ನು ಓದುವ ಗೀಳು ಬೆಳೆಸಿಕೊಂಡ. ಬರ ಬರುತ್ತ ವಿಜ್ಞಾನದಲ್ಲಿ ತನಗಿರುವ ಆಸಕ್ತಿಯನ್ನು ಗುರುತಿಸಿಕೊಂಡು ಸರ್ ಹಂಪ್ರೆ ಡೇವಿಯ ಸಹಾಯಕನಾಗಿ ಕಾರ‍್ಯ ನಿರ‍್ವಹಿಸಿ ಕೊನೆಗೆ  ಜಗತ್ತಿನ  ಸುಪ್ರಸಿದ್ಧ ವಿಜ್ಞಾನಿಯಾದ ಆತನೇ ಮೈಕೆಲ್ ಫ್ಯಾರಡೆ. ಆಸಕ್ತಿಯನ್ನು ಗುರುತಿಸಿಕೊಳ್ಳಬೇಕೆಂದರೆ ನಿಮ್ಮನ್ನು ನೀವು ಅರ್ಥೈಸಿಕೊಳ್ಳಿ. ಅಂದರೆ  ನಿಮ್ಮಲ್ಲಿರುವ ಬಲ ಮತ್ತು ಬಲಹೀನತೆಗಳನ್ನು ತಿಳಿದುಕೊಳ್ಳಿ. ಈ ಕೆಲಸ ನನಗೆ ತುಂಬಾ ಖುಷಿ ನೀಡುತ್ತದೆ. ಇದನ್ನು ನಾನು ಇತರರಿಗಿಂತ ಬಹಳಷ್ಟು ಚೆನ್ನಾಗಿ ಮಾಡಬಲ್ಲೆ. ವಿವಿಧ ವಿಷಯಗಳಲ್ಲಿ ಆಸಕ್ತಿ ಇದೆ ಎಂದೆನಿಸಿದಾಗ ಇದನ್ನು ಮಾಡದಿದ್ದರೆ ಏನೋ ಕಳೆದುಕೊಂಡಂತೆ ಅನಿಸುತ್ತದೆ. ಈ ಕೆಲಸ ನನಗೆ ಪಂಚ ಪ್ರಾಣ. ಇದನ್ನು ಮಾಡದೇ ನಾನಿರಲಾರೆ.ಅಂತ ಹೇಳುತ್ತಿರೋ ಅದೇ ನಿಜವಾಗಲೂ ನಿಮ್ಮ ಆಸಕ್ತಿ ಎಂದು ಪರಿಗಣಿಸಿ ನಿಮ್ಮ ಗುರಿಯನ್ನು ನಿರ‍್ಣಯಿಸಿ. ನೀವು ನೀವಾಗಿರಿ ಬೇರೆಯವರು ನಿಮ್ಮನ್ನು ಇಷ್ಟಪಡಬೇಕೆಂದು ನಿಮಗೆ ಇಷ್ಟವಿಲ್ಲದ, ನಿಮ್ಮ ವ್ಯಕ್ತಿತ್ವಕ್ಕೆ ಹೊಂದದ ಬದಲಾವಣೆಗಳಿಗೆ ಮುಂದಾಗವೇಡಿ. ಭೌತಿಕವಾಗಿ ನಿಮ್ಮನ್ನು ನೀವು ಬದಲಾಯಿಸಿಕೊಳ್ಳಲು ಪ್ರಯತ್ನಿಸಬೇಡಿ. ನಿಮ್ಮ ಕುಟುಂಬದ ಆಚರಣೆಗಳು, ಪದ್ದತಿಗಳು, ಸತ್ಸಂಪ್ರದಾಯಗಳು, ಹಬ್ಬ ಹರಿದಿನಗಳು, ವ್ರತಾಚರಣೆಗಳು ಮೌಢ್ಯತೆಯಿಂದ ಮುಕ್ತವಾಗಿರುವಾಗ ಅವುಗಳನ್ನು ಬದಲಾಯಿಸುವುದರಿಂದ ಅರ‍್ಥವಿಲ್ಲ. ಸಣಕಲು ದೇಹದವನು ದಪ್ಪದಾಗಿ ಕಾಣಲು ಸ್ವೆಟರ್ ಧರಿಸಿದರೆ ನೀವು ಅದನ್ನು ಫ್ಯಾಷನ್ ಎಂದು ತಿಳಿದು ತಡೆದುಕೊಳ್ಳಲಾರದ ಬೇಸಿಗೆಯ ಧಗೆಯಲ್ಲಿ ಒದ್ದಾಡಬೇಕಾಗುತ್ತದೆ.  ಅಂಧರಾಗಿ ಅನುಕರಿಸಲು ಹೋದರೆ ನಗೆಪಾಟಲಿಗೆ ಈಡಾಗುತ್ತೀರಿ. ನಿಮ್ಮ ದೇಹಕ್ಕೆ ಕಾಲಮಾನಕ್ಕೆ ಏನು ಸೂಕ್ತವೋ ಅದನ್ನೇ ಧರಿಸಿ. ನಟ ಪುನೀತ್ ರಾಜ್ ಕುಮಾರ ಎಂದರೆ ಅಚ್ಚು ಮೆಚ್ಚು ಆತನ ಬಿಗ್ ಫ್ಯಾನ್ ನಾನು ಎನ್ನುತ್ತ ಆತನ ನಡೆ ನುಡಿಯನ್ನು ಅನುಸರಿಸಿದರೆ ನಿಮ್ಮನ್ನು ಜ್ಯೂನಿಯರ್ ಪುನಿತ್ ಎಂದು ಕರೆಯುತ್ತಾರೆ ಹೊರತು ನಿಮ್ಮನ್ನು ನಿಮ್ಮ ಹೆಸರಿನಲ್ಲಿ ಗುರುತಿಸುವುದಿಲ್ಲ. ಹೀಗಾಗಿ ಎಲ್ಲೆಲ್ಲಿ ಯಾವುದು ಒಳ್ಳೆಯದಿದೆಯೋ ಅದನ್ನು ನಿಮ್ಮದಾಗಿಸಿಕೊಳ್ಳಿ ಆದರೆ ಸಂಪೂರ‍್ಣವಾಗಿ ನಿಮ್ಮತನವನ್ನು ಬಿಟ್ಟುಕೊಡಬೇಡಿ. ಹಾಗೆ ಮಾಡಲು ಹೋದರೆ ನವಿಲು ಕುಣಿಯುತ್ತೆ ಅಂತ ಕೆಂಬೂತ ಕುಣಿಯಲು ಹೋದಂತೆ ಆಗುತ್ತದೆ. ‘ನಮಗೆ ಜೀವನವನ್ನು ಕೊಟ್ಟ ದೇವರು ಅದರ ಜೊತೆಯಲ್ಲಿಯೇ ಸ್ವಾತಂತ್ರ್ಯವನ್ನೂ ದಯಪಾಲಿಸಿದ್ದಾನೆ.’ ಎಂಬುದು ಜೆರ‍್ಸನ್ ಮಾತು. ಸ್ವತಂತ್ರವಾಗಿ ನೆಮ್ಮದಿಯಿಂದಿರಿ. ಸ್ವಸ್ವಾರ್ಥದಿಂದ ಪಡೆಯುವ ಗೌರವವೇ ನಿಜವಾದ ಗೌರವ. ಅವಮಾನಗಳಿಗೆ ಹೆದರದಿರಿ ಬಹು ಅಂಗವೈಕಲ್ಯವನ್ನು ಹೊರೆ ಎಂದುಕೊಳ್ಳದೇ ಸಾಧನೆಯ ಪರ‍್ವತವನ್ನೇರಿದ ಹೆಲೆನ್ ಕೆಲ್ಲರ್, ಕುರುಡನಾದರೂ ಡಾಕ್ಟರ್ ಆದ ಡೇವಿಡ್ ಹರ‍್ಟ್ಮನ್,ಬಡತನವನ್ನು ಬೆನ್ನಿಗಂಟಿಸಿಕೊಂಡು ಹುಟ್ಟಿದ ಅಬ್ರಹಾಂ ಲಿಂಕನ್ ಅಧ್ಯಕ್ಷನಾಗಲು ಪಟ್ಟ ಅವಮಾನಗಳು ಅಷ್ಟಿಷ್ಟಲ್ಲ. ಹೆಜ್ಜೆ ಹೆಜ್ಜೆಗೂ ಅವಮಾನದ ರುಚಿಯನ್ನು ಕಂಡವರೆ ಅವರೆಲ್ಲ. ಆದರೂ ತನ್ನಂತೆ ಇರುವವರ ಜೊತೆ ತಮ್ಮನ್ನು ಹೋಲಿಸಿಕೊಂಡು ಅಮೂಲ್ಯ ಜೀವನ ವ್ಯರ್ಥವಾಗಿಸಿಕೊಳ್ಳಲಿಲ್ಲ. ಬದಲಾಗಿ ಅವಮಾನಗಳಿಗೆ ಕೆಚ್ಚೆದೆಯಿಂದ ಸೆಡ್ಡು ಹೊಡೆದು ಗೆದ್ದರು. ಖ್ಯಾತ ಫೋರ‍್ಢ್   ಮೋಟಾರು ಕಂಪನಿಯ ಮುಖ್ಯಸ್ಥ ಹೆನ್ರಿ ಫೋರ‍್ಢ್ ಕಾರು ಕಂಡು ಹಿಡಿಯುವ ಕಠಿಣ ಪರಿಶ್ರಮದಲ್ಲಿದ್ದ ಕಾಲದಲ್ಲಿ ಒಬ್ಬ ಹಳ್ಳಿಗ ಆತನನ್ನು ಉದ್ದೇಶಿಸಿ,’ಕುದುರೆಗಳೇ ಇಲ್ಲದ ಚಕ್ರದ ರಥವನ್ನು ಎಳೆಯಬೇಕು ಅಂದುಕೊಂಡಿದ್ದಿಯಾ? ಶ್ರೀಮಂತ ಆಗೋ ಹುಚ್ಚು ಕನಸು ಕಾಣ್ತಿದಿಯಾ?’ ಎಂದು ವ್ಯಂಗ್ಯವಾಗಿ ಕೇಳಿದನಂತೆ. ಅದಕ್ಕೆ ಫೋರ‍್ಡ್ ‘ನಾನಷ್ಟೇ ಅಲ್ಲ ಸಾವಿರಾರು ಜನರನ್ನು ಶ್ರೀಮಂತರನ್ನಾಗಿ ಮಾಡಬೇಕು ಅಂತ ಕನಸು ಕಾಣ್ತಿದಿನಿ.’ ಅಂತ ಗಟ್ಟಿಯಾದ ಧ್ವನಿಯಲ್ಲಿ ಉತ್ತರಿಸಿದನಲ್ಲದೇ ತಾನು ಅಂದಂತೆ ಸಾಧಿಸಿದ. ಹೋಲಿಕೆಯ ಗೋರಿಯಲ್ಲಿ ಹೂತುಕೊಳ್ಳದೇ ನೈಜತೆಯನ್ನು ಅರ‍್ಥೈಸಿಕೊಂಡು ನಡೆದರೆ  ಚೆಂದದ ಜೀವನವೊಂದು ನಾವು ನಡೆಯುವ ದಾರಿಯಲ್ಲಿ ಮುಗಳ್ನಗುತ್ತದೆ. ************* ಲೇಖಕರ ಬಗ್ಗೆ ಲೇಖಕಿ ಜಯಶ್ರೀ ಜೆ ಅಬ್ಬಿಗೇರಿ ಸರಕಾರಿ ಪದವಿ ಪೂರ‍್ವ ಕಾಲೇಜಿನಲ್ಲಿ ಆಂಗ್ಲ ಭಾಷಾ ಉಪನ್ಯಾಸಕಿ . ಇವರ ಹನ್ನೆರಡು ಪುಸ್ತಕಗಳು ಪ್ರಕಟಗೊಂಡಿವೆ. ಓದು ಮತ್ತು ಬರಹ ಹಾಡುಗಾರಿಕೆ ಮಾತುಗಾರಿಕೆ ಇವರ ಹವ್ಯಾಸಗಳು

ಬಿಟ್ಟು ಬಿಡಿ ಹೋಲಿಕೆ ಬೆಳೆಸಿಕೊಳ್ಳಿ ಸ್ವಂತಿಕೆ Read Post »

ಅಂಕಣ ಸಂಗಾತಿ, ಮುಖಾಮುಖಿ

ಮನದೊಳಗಣ ತಾಕಲಾಟವೇ ಅಭಿವ್ಯಕ್ತಿ

ಅಂಕಣ ಬರಹ ಕವಿಯಿತ್ರಿ ನೂತನ ಎಂ.ದೋಶೆಟ್ಟಿ ಉತ್ತರ ಕನ್ನಡದ ಸಿದ್ದಾಪುರದವರು. ಮೃತ್ಯುಂಜಯ ದೋಶೆಟ್ಟಿ , ಪ್ರೇಮಾ ದೋಶೆಟ್ಟಿ ಅವರ ಮಗಳು.‌ಅವರ ಪತಿ ಶಾಮ ಸುಂದರ ಕದಂ ಕಾರವಾರ ಬಳಿಯ ಸದಾಶಿವಗಡದವರು. ಆಕಾಶವಾಣಿಯಲ್ಲಿ ಎಂಜಿನಿಯರ್. ಕವಯಿತ್ರಿ ಕತೆಗಾರ್ತಿ ನೂತನ ದೋಶೆಟ್ಟಿ ಸಮೂಹ ಸಂವಹನ , ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಆಕಾಶವಾಣಿಯಲ್ಲಿ ಕಾರ್ಯಕ್ರಮ ನಿರ್ವಾಹಕ ಹುದ್ದೆ ನಿಭಾಯಿಸುತ್ತಿದ್ದಾರೆ. ಕಾರವಾರ ಆಕಾಶವಾಣಿ, ಬೆಂಗಳೂರು ಆಕಾಶವಾಣಿಯಲ್ಲಿ ಸೇವೆ ಮಾಡಿ, ಇದೀಗ ಹಾಸನ ಜಿಲ್ಲಾ ಆಕಾಶವಾಣಿಯಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದಾರೆ. ೨೦೦೯ರಲ್ಲಿ ಕಾಲವೆಂಬ ಮಹಾಮನೆ ಕಾವ್ಯ ಸಂಕಲನ ಪ್ರಕಟಿಸಿದರು. ಭಾಗೀರತಿ ಉಳಿಸಿದ ಪ್ರಶ್ನೆಗಳು ,ಮಾನವೀಯತೆ ಬಿಕ್ಕಳಿಸಿದೆ(೨೦೧೬) ಅವರ ಕವಿತಾ ಸಂಕಲನಗಳು. ಯಾವ “ವೆಬ್ ಸೈಟ್ ನಲ್ಲೂ ಉತ್ತರವಿಲ್ಲ ” ಕಥಾ ಸಂಕಲನ. ಅಂತಃಸ್ಪುರಣ, ಮರೆಯಾಯಿತೆ ಪ್ರಜಾಸತ್ತೆ ಅವರ ಲೇಖನಗಳ ಸಂಗ್ರಹ. ಆಕಾಶವಾಣಿ ಅಂತರಾಳ‌ ಅವರು ಆಕಾಶವಾಣಿ ಕುರಿತು ಬರೆದ ಪುಸ್ತಕ. ‌ಬಾ ಬಾಪು , ಆನ್ ಗಾಂಧಿಯನ್ ಪಾಥ್ ಆಕಾಶವಾಣಿಗಾಗಿ ರೂಪಿಸಿದ ರೂಪಕಗಳು. ವಚನಸಾಹಿತ್ಯ, ಬಸವಣ್ಣ, ಗಾಂಧಿಜೀ ವಿಚಾರಧಾರೆಯಿಂದ ಪ್ರಭಾವಿತರಾದ ಲೇಖಕಿ. ಜೀವಪರ ಕಾಳಜಿಯ ಕವಯಿತ್ರಿ. ‌ ಈ ಸಲ  ಸಾಹಿತ್ಯ ಸಂಗಾತಿ ಕನ್ನಡ  ವೆಬ್ ಜೊತೆ ಮಾತಿನಲ್ಲಿ ಮುಖಾಮುಖಿಯಾಗಿದ್ದಾರೆ… ……. ಲೇಖಕಿ ನೂತನ ದೋಶೆಟ್ಟಿ ಅವರೊಡನೆ ಮುಖಾಮುಖಿಯಾಗಿದ್ದಾರೆ ಕವಿ ನಾಗರಾಜ ಹರಪನಹಳ್ಳಿ  ಪ್ರಶ್ನೆ : ಕತೆ, ಕವಿತೆ ಗಳನ್ನು ಬರೆಯುವುದರ ಕುರಿತು ಹೇಳಿ, ಇದೆಲ್ಲಾ ಹೇಗೆ ಆರಂಭವಾಯಿತು? ಉತ್ತರ : ನಾನು ಮೊದಲು ಬರವಣಿಗೆ ಶುರು ಮಾಡಿದ್ದು ನಾನು ಓದಿದ ಪುಸ್ತಕದ ಕುರಿತು ನನಗೆ ಅನ್ನಿಸಿದ ನಾಲ್ಕು ಸಾಲುಗಳನ್ನು ನೋಟ್ ಪುಸ್ತಕದಲ್ಲಿ ಬರೆಯುವುದರ ಮೂಲಕ. ಅದೊಂಥರ ವಿಮರ್ಶೆ ಅಂತ ಆಗ ಅಂದ್ಕೊಂಡಿದ್ದೆ. ಕಾಲೇಜಿನ ಆರಂಭದ ದಿನಗಳಲ್ಲಿ. ಆ ಪುಸ್ತಕ ಈಗಲೂ ನನ್ನ ಹತ್ತಿರ ಇದೆ. ಆನಂತರ ಸಣ್ಣ ಕವಿತೆ ಬರೀತಿದ್ದೆ.  ಅದೇ ಪುಸ್ತಕದಲ್ಲಿ. ನಾನು ಬಹುತೇಕ ಮೌನಿ. ಬಹಳ ಕಡಿಮೆ ಮಾತು. ಹಾಗಂತ ಮನದೊಳಗಿನ ದೊಂಬರಾಟ ಇರ್ತಿತ್ತಲ್ಲ. ಅದಕ್ಕೆ ಒಂದು ಅಭಿವ್ಯಕ್ತಿ ಬೇಕಾಗುತ್ತಿತ್ತು. ಅದು ಕವಿತೆಯ ಸಾಲುಗಳಲ್ಲಿ ಹೊರಬರಲು ಹವಣಿಸಿತ್ತು. ಕತೆಯೂ ಹಾಗೇ. ಸುತ್ತಲಿನ ಪರಿಸರದಲ್ಲಿ ಗಮನಿಸಿದ, ತಟ್ಟಿದ ವಿಷಯದ ಎಳೆ ಮನಸ್ಸಿನಲ್ಲಿ ಕೊರೆಯಲು ಶುರುವಾಗುತ್ತಿತ್ತು. ಕತೆಯಾಗಲಿ,  ಕವಿತೆಯಾಗಲಿ ಅದು ಒಂದು ರೂಪಕ್ಕೆ ಬರುವ ತನಕದ ತಹತಹವನ್ನ ಅನುಭವಿಸಿಯೇ ತೀರಬೇಕು. ಅದು ಅಕ್ಷರದ ರೂಪದಲ್ಲಿ ಇಳಿದಾದ ಮೇಲಿನ ನಿರುಮ್ಮಳತೆ ಕೂಡ ಅತ್ಯಂತ ಸುಖದ ಅನುಭವಗಳಲ್ಲಿ ಒಂದು. ಬರವಣಿಗೆ ನನ್ನ ನಿಲುವು, ಸಮಾಜದ ಆಶಯ, ನನ್ನ ಆಶಯದ ಕಾಣ್ಕೆ. ಇದರ ಹೊರತಾಗಿಯೂ ಇದಕ್ಕೇ ಬರೀತೇನೆ ಅಂತ ಹೇಳೋದಕ್ಕೆ ಆಗೋದಿಲ್ಲ. ನನಗೆ ಬರವಣಿಗೆ ತೀರಾ ಖಾಸಗಿ, ತೀರ ಸ್ವಂತದ್ದು.. ಹೀಗಂದಾಗ ಕೆಲವರು ಕೇಳ್ತಾರೆ. ಅದು ಬೇರೆಯವರು ಓದೋದಕ್ಕೆ ಅಂತ. ಅದಕ್ಕೆ ಆ ಶಕ್ತಿ ಇದ್ದರೆ ತುಂಬ ಸಂತೋಷ. ತಾನಾಗೇ ಅದನ್ನು ಆದರೆ ಕತೆ, ಕವಿತೆ ಗಳಿಸಿಕೊಳ್ಳಬೇಕು. ಕವಿತೆ ಹುಟ್ಟುವ ಕ್ಷಣ… ತಡೆಹಿಡಿದ ದುಃಖ ತಮ್ಮವರು ಕಂಡಾಗ ಕಟ್ಟೆಯೊಡೆದು ಹೊರ ಬರುತ್ತದಲ್ಲಾ ಅಂಥ ಒತ್ತಡ ಒಳಗೆ ಇರುತ್ತದೆ ಅಂತ ಕಾಣುತ್ತೆ. ಅದಕ್ಕೆ ಚುರುಕು ಮುಟ್ಟಿಸಿದ ತಕ್ಷಣ ತಾನಾಗಿ ಬರುತ್ತದೆ. ದುಃಖ, ನೋವು,ಸಂಕಟ, ವಿಷಾದ, ಕಳೆದುಕೊಳ್ಳುವುದು, ಒಂಟಿತನ , ಸಂಬಂಧ ಮೊದಲಾದವು ತೀವೃವಾಗಿ ಬರೆಸುವಂತೆ ಸಂತೋಷ , ಸುಖ ಬರೆಸಲಾರದು. ಬರೆದಾದ ಮೇಲೆ ಅದೊಂದು ಬಂಧಮುಕ್ತತೆ… ಕತೆ ಹಾಗಲ್ಲ. ಕೆಲವು ಕತೆಗಳು ಒಂದೇ ಓಟದಲ್ಲಿ ಸಾಗಿಬಿಡುತ್ತವೆ. ಕೆಲವಕ್ಕೆ ಹೈರಾಣಾಗಿ ಹೋಗಿಬಿಡುತ್ತೇವೆ. ಬಂದಿರುವುದು ನನ್ನ ಒಂದು ಕಥಾ ಸಂಕಲನ. ಯಾವ ವೆಬ್ ಸೈಟಿನಲ್ಲೂ ಉತ್ತರವಿಲ್ಲ ಅಂತ. ಅದೇ ಶೀರ್ಷಿಕೆಯ ಕತೆ ನನ್ನ ಮನಸ್ಸಿನಲ್ಲಿ ಮೂಡಿದ್ದು ಬಸ್ಸಿನಲ್ಲಿ ಹೋಗುತ್ತಿರುವಾಗ. ಅಲ್ಲೇ ಗುರುತು ಹಾಕ್ಕೊಂಡಿದ್ದೆ. ಇನ್ನು ಕಾರವಾರದಲ್ಲಿ ಇದ್ದಾಗ ಕಡಲು ಬಹಳ ಕಾಡಿಸಿತ್ತು. ಬೀಚಿನಲ್ಲಿ ಶೇಂಗಾ ಮಾರಲು ಬರುವ ಹುಡುಗನನ್ನು ಕಂಡಾಗ ಮನೆಗೆ ಬಂದು ಬರೆದಿದ್ದಿದೆ. ಒಂದೊಂದು ಕತೆಗೂ ಅದರದ್ದೇ ಆದ ಇತಿಹಾಸ ಇರುತ್ತೆ. ಕಾವ್ಯ,ಕತೆಯ ವಸ್ತು, ವಿಷಯ…. ಮನುಷ್ಯ ಸಂಬಂಧಗಳು ಬಹುತೇಕ ವಸ್ತು ಕತೆಗಳಲ್ಲಿ. ಸಾಮಾಜಿಕ ಚಿತ್ರಣ, ಶೋಷಣೆಗಳೂ ಇವೆ. ಪ್ರಸ್ತುತ ರಾಜಕೀಯ…. ನಾನು ರಾಜಕೀಯವನ್ನು ಹತ್ತಿರದಿಂದ ಗಮನಿಸುತ್ತೇನೆ. ಅದರ ನಡೆಗಳು ನಮ್ಮ ಸಾಮಾಜಿಕ ಹಾಗೂ ವೈಯುಕ್ತಿಕ ಜೀವನದ ಮೇಲೆ ಬಹಳ ಪ್ರಭಾವ ಬೀರುತ್ತವೆ. ಆದರೆ ಬಹುತೇಕರು ತಮಗೆ ಸಂಬಂಧವಿಲ್ಲ ಎಂಬಂತೆ ಇರುತ್ತಾರೆ. ಹಾಗಾಗಬಾರದು. ನಮ್ಮಲ್ಲಿ ರಾಜಕೀಯ ಪ್ರಜ್ಞೆ ಬಹಳ ಕಡಿಮೆ ಅನ್ನಿಸುತ್ತದೆ. ಬಾಲ್ಯ, ಹರೆಯ….ಕುರಿತು ಒಂದಿಷ್ಟು ಬಾಲ್ಯ  ಧಾರಾಳವಾಗಿ ಇಣುಕಿದೆ ಕವಿತೆಗಳಲ್ಲಿ . ಏಕೆಂದರೆ ನಮ್ಮದು ಸಮೃದ್ಧ ಬಾಲ್ಯ. ಮಲೆನಾಡಿನ ಬೆಚ್ಚನೆಯ,  ನಚ್ಚಗಿನ ಬಾಲ್ಯ. ನನ್ನ  ಊರು ಸಿದ್ದಾಪುರ. ಊರಿಗೆ ಊರೇ ನಮ್ಮ ಆಟದ ಅಂಗಳವಾಗಿತ್ತು. ಎದುರು-ಬದುರು, ಅಕ್ಕ-ಪಕ್ಕ ಎಲ್ಲರೂ ನಮ್ಮವರೇ ಎಂದು ಬೆಳೆದವರು. ಈಗಲೂ ಅದನ್ನು ಎಲ್ಲರಲ್ಲೂ ಕಾಣಲು ಹೋಗಿ   ಮೋಸ ಹೋಗುತ್ತೇನೆ. ಸಾಂಸ್ಕೃತಿಕ  ವಾತಾವರಣ ಏನನಿಸುತ್ತದೆ? ಬಸವ ತತ್ತಗಳಲ್ಲಿ ಬೆಳೆದ ನಮಗೆ   ಯಾವುದೇ ಜಾತಿ- ಮತಗಳ ಬೇಧ ಕಾಣಿಸದೇ ನಮ್ಮ ಹಿರಿಯರು ಬೆಳೆಸಿದ್ದು ನಮ್ಮ ಭಾಗ್ಯ. ಆದರೆ ಇವುಗಳು ಇಂದು  ಮುನ್ನೆಲೆಗೆ ಬಂದು ನಿಂತಿವೆ. ಇವುಗಳ ಮಾಯೆಯ ಮುಸುಕಿಂದ ಒಂದು ಅಂತರ ಕಾಪಾಡಿಕೊಳ್ಳುವುದು ಕಷ್ಟವೇನಲ್ಲ. ಧರ್ಮ, ದೇವರ ಕುರಿತು ಹೇಳಿ… ನಾವು ಚಿಕ್ಕಂದಿನಿಂದ ನಮ್ಮ ಮನೆಯಲ್ಲಿ ಮಕ್ಕಳೆಲ್ಲ ಎರಡು ಹೊತ್ತು … ದೇವರೆದುರು ನಿಂತು ಬಸವಣ್ಣನವರ    ಕಳಬೇಡ, ಕೊಲಬೇಡ …ವಚನ  ಹೇಳಿಕೊಳ್ಳುತ್ತಿದ್ದೆವು. ಉಳಿದ ಇನ್ನೂ ಏನೇನೋ ಹೇಳಿಕೊಳ್ಳುತ್ತಿದ್ದೆವು. ಆದರೆ ಆ ವಚನ ನನ್ನ ಮನದಲ್ಲಿ ಮಾಡಿರುವ ಪ್ರಭಾವ ಅಪಾರ. ನಾನು ಇಂದಿಗೂ ಅದನ್ನು ಅಕ್ಷರ ಷಹ ಪಾಲಿಸುತ್ತೇನೆ. ಇದರಿಂದ ಎಷ್ಟು ಸಂಕಟಗಳನ್ನು ಅನುಭವಿಸಬೇಕಾಗುತ್ತದೆ. ಆದರೂ ಅದೇ ನನ್ನ ಧರ್ಮ. ಆಗೆಲ್ಲ ನಾನು ಸಮಾಧಾನ ಮಾಡಿಕೊಳ್ಳುವುದು ಬಸವಣ್ಣನನ್ನೇ ಬಿಡದವರು ನಮ್ಮನ್ನು ಬಿಟ್ಟಾರೇ ? ಅಂತ. ಅವರೆಂದಂತೆ ಕಾಯಕವೇ ನನ್ನ ಧರ್ಮ. ಈ ಧರ್ಮದಲ್ಲಿ ಎಷ್ಟು ಕಷ್ಟವಿದೆಯೇ ಅಷ್ಟೇ ಸುಖವಿದೆ. ನನಗೆ ಆಗ ಕಷ್ಟದಿಂದ ಸಿಗುವ ಸುಖವೇ ಇಷ್ಟ. ಅದು ಬಹಳ ಚೇತೋಹಾರಿ. ಇನ್ನು ದೇವರು …ನನಗೆ ಒಬ್ಬ ಮಿತ್ರನಂತೆ. ಯಾರ ಬಳಿಯೂ ಹೇಳಲಾಗದ ವಿಷಯ, ಚರ್ಚೆಗೆ ಆ ನಿರಾಕಾರ ಬೇಕು. ದೇವರು ಎಂಬುದು ಒಂದು ಅನುಭೂತಿ. ನಿಮ್ಮನ್ನೆ ನೀವು ಆಂತರ್ಯದಲ್ಲಿ ಕಾಣುವ ಬಗೆ. ಸಾಹಿತ್ಯ ವಲಯದ ರಾಜಕೀಯದ ಬಗ್ಗೆ ನಾನು  ಸಿದ್ದಾಪುರದವಳು. ಅಲ್ಲಿಂದ ದೂರ ಇದ್ದೇನೆ. ಉತ್ತರ ಕನ್ನಡ ಜಿಲ್ಲೆಯಲ್ಲೇ ನಾನು ಅಪರಿಚಿತಳು. ನನ್ನ ಮೂರು ಕವನ ಸಂಕಲನಗಳಿವೆ. ಒಂದು ಕವಿತೆ ಬೆಂಗಳೂರು ವಿಶ್ವವಿದ್ಯಾಲಯದ  ಪದವಿಗೆ ಪಠ್ಯವಾಗಿ ತುತ್ತು 2013ರಲ್ಲಿ. ಸುಧಾದಲ್ಲಿ ಬಂದಿದ್ದ ಕತೆಯನ್ನು ಕುವೆಂಪು ವಿಶ್ವವಿದ್ಯಾಲಯದ  ಪದವಿಗೆ ಪಠ್ಯ ಮಾಡಿದ್ದರು 2010ರಲ್ಲಿ. ನಾನು ಅವುಗಳನ್ನು ನೋಡಲೂ ಇಲ್ಲ. ಯಾರೋ ಹೇಳಿದರು ಇದೆ ಎಂದು. ಸಂತೋಷವಾಯಿತು. ಸಾವಿರಾರು, ಮಕ್ಕಳು ಓದಿದರಲ್ಲ ಎಂದು.  ನನ್ನಷ್ಟಕ್ಕೆ ನಾನು ಬರೆದುಕೊಂಡು ಇರುತ್ತೇನೆ. ಯಾವ ಹಪಹಪಿಯೂ ಇಲ್ಲ. ಇದು ನನ್ನ  ನಿಲುವು.ಉಳಿದವರ ನಿಲುವಿನಲ್ಲಿ ನನಗೆ ಆಸ್ಥೆ ಇಲ್ಲ. ದೇಶದ ಚಲನೆ ಬಗ್ಗೆ ಏನನಿಸುತ್ತದೆ? ಅಂದರೆ ರಾಜಕೀಯವಾಗಿ ಮಾತ್ರ ಅಲ್ಲ. ಸಾಮಾಜಿಕ, ಆರ್ಥಿಕ,  ಶೈಕ್ಷಣಿಕ ..ಹೀಗೆ. ಸಾಕಷ್ಟು ಅಭಿವೃದ್ಧಿ ಆಗಿದೆ. ರಾಜಕೀಯ ಹಿನ್ನೆಲೆಯಲ್ಲಿ ಸ್ಥಿತ್ಯಂತರಗಳು ಸಹಜ. ಆದರೆ ನಮ್ಮಲ್ಲಿ ಅದಕ್ಕೆ ಹಾಹಾಕಾರ ಎಬ್ಬಿಸುವ ಚಾಳಿ ಇದೆ. ಬದಲಾಗಿ ಅದನ್ನು ಕೌಂಟರ್ ಮಾಡುವ ಜಾಣ್ಮೆ ಬೇಕು. ಈಗ ನೀವು ಗಮನಿಸಿದರೆ ಯಾವುದೇ ಮುಖ್ಯ ಚಳುವಳಿಗಳಿಲ್ಲ. ಇದೂ ಒಂದು ಫೇಸ್. ತನಗೆ ಬೇಕಾದ್ದನ್ನು ಪಡೆಯುವುದು ಸಮಾಜಕ್ಕೆ ಗೊತ್ತಿದೆ. ಆ ಮಟ್ಟಿಗೆ ನನ್ನದು ಆಶಾವಾದ.ಆದರೆ ಸಾಹಿತ್ಯ ಕ್ಷೇತ್ರ ಒಡೆಯದೇ ಒಂದಾಗಿ, ಗುಂಪುಗಾರಿಕೆ ಇರದೇ ಮಾದರಿಯಾಗಿರಬೇಕು ಎಂಬ ಆಸೆಯಿದೆ. ಸಾಹಿತ್ಯವನ್ನು ಅದರ ಮೌಲಿಕತೆಯೊಂದಿಗೆ ಮಾತ್ರ ನೋಡುವ ವಾತಾವರಣ  ಒಡಮೂಡಲಿ. ನಿಮ್ಮ  ಕನಸು… ಓದಬೇಕಾದ್ದು ಬಹಳ ಇದೆ. ನನಗೆ ಮಿತಿಗಳಿವೆ. ಹಾಗಾಗಿ ನನ್ನ ಕನಸುಗಳು ಬಹಳ ಎತ್ತರ ಹಾರಲಾರವು. ಇಷ್ಟದ ಲೇಖಕರು ಕನ್ನಡದಲ್ಲಿ ತೇಜಸ್ವಿ, ಬೇಂದ್ರೆ ಇಂಗ್ಲೀಷ್ ಹೆಚ್ಚು ಓದಿಲ್ಲ. ವರ್ಡ್ಸ್ವರ್ತ್ ನೆಚ್ಚಿನ ಕವಿ. ಈಚೆಗೆ ಓದಿದ ಕೃತಿ… ಲಕ್ಷ್ಮೀ ಪತಿ ಕೋಲಾರ ಅವರ ಹರಪ್ಪ ಡಿಎನ್ ಎ ನುಡಿದ ಸತ್ಯ, ರವಿ ಹಂಜ್ ಅವರು  ಹ್ಯೂಎನ್ ತ್ಸಾಂಗನ ಮಹಾಪಯಣ, ನೇಮಿಚಂದ್ರರ ಯಾದ್ ವಶೀಮ್.  ಇಷ್ಟದ ಕೆಲಸ:  ಗಾರ್ಡನಿಂಗ್ ಇಷ್ಟದ ಸ್ಥಳ:  ಕೈಲಾಸ ಮಾನಸ ಸರೋವರ  ಮರೆಯಲಾರದ ಘಟನೆ :  ಬಹಳಷ್ಟಿವೆ. ಸಾಹಿತ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ …ಊಟಿಗೆ ಹೋಗಿದ್ದಾಗ ಬೆಟ್ಟದ ಮೇಲೆ ಜಿ ಎಸ್ ಶಿವರುದ್ರಪ್ಪ ನವರು ಸಿಕ್ಕಿದ್ದು. ನನ್ನ ಅತೀವ ಸಂಕೋಚ,   ಮುಜುಗರದಿಂದ ನಾನು ಬರೆದದ್ದನ್ನು ಯಾರಿಗು ಹೇಳುತ್ತಿರಲಿಲ್ಲ. ತೋರಿಸುತ್ತಲೂ ಇರಲಿಲ್ಲ. ಈಗಲೂ ಅದೇನು ಹೆಚ್ಚು ಬದಲಾಗಿಲ್ಲ. ************************************** ಲೇಖಕರ ಬಗ್ಗೆ: ಹರಪನಹಳ್ಳಿ ಹುಟ್ಟೂರು. ಹರಪನಹಳ್ಳಿ ತಾಲೂಕಿನ ಮೈದೂರು-ಚಿಗಟೇರಿ ಬೆಳೆದ ಊರು. ಪಿಯು ಓದಿದ್ದು ಕೊಟ್ಟೂರಿನಲ್ಲಿ. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿ.ಎ., ಕವಿವಿಯಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ. ದಾವಣಗೆರೆ, ಸದಾಶಿವಗಡ ಮತ್ತು ಭಟ್ಕಳದಲ್ಲಿ ಕನ್ನಡ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿ, 1997 ರಿಂದ ಕಾರವಾರದಲ್ಲಿ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಜನವಾಹಿನಿ, ಜನಾಂತರಂಗ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಇವರು, ಈ ಟಿವಿ ಕನ್ನಡ ನ್ಯೂಸ್ ಚಾನೆಲ್ಲಿಗೆ ವರದಿಗಾರಿಕೆ ಬಳಿಕ ಈಗ ಉದಯವಾಣಿ , ಬೆಳಗಾವಿಯ ಲೋಕದರ್ಶನ ಪತ್ರಿಕೆಗೆ ವರದಿಗಾರರಾಗಿದ್ದಾರೆ. 2009ರಲ್ಲಿ ‘ಕಡಲದಂಡೆಗೆ ಬಂದ ಬಯಲು’ ಎಂಬ ಕಥಾ ಸಂಕಲನ, 2013ರಲ್ಲಿ ‘ಬಿಸಿಲ ಬಯಲ ಕಡಲು’ ಎಂಬ ಕವಿತಾ ಸಂಕಲನ ಪ್ರಕಟಣೆ.2019 ರಲ್ಲಿ ‘ವಿರಹಿದಂಡೆ’ ಕವಿತಾ ಸಂಕಲನ ಪ್ರಕಟಿಸಿದ್ದಾರೆ. ಕಾರವಾರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.‌

ಮನದೊಳಗಣ ತಾಕಲಾಟವೇ ಅಭಿವ್ಯಕ್ತಿ Read Post »

ಕಾವ್ಯಯಾನ

ಜ್ಞಾನೋದಯದ ನಿದ್ದೆ

ಕವಿತೆ ವಸುಂಧರಾ ಕದಲೂರು ನಡುರಾತ್ರಿಗಳಲಿ ಒಮ್ಮೊಮ್ಮೆ ನಿದ್ದೆಸುಳಿಯದೇ ನರಳಿ,ನರಳಾಡಿಹೊರಳಾಡುವಾಗ ಮನಕೆ ಜಗದಚಿಂತೆಯೂ ಹಿಡಿದು ಚಿಂತನೆಗೆಶುರುವಾಗುತ್ತದೆ. ಇಂತಿಪ್ಪ ಅಶಾಂತಿಗೆ ಶಾಂತಿಯಹುಡುಕುವ ಮನಸ್ಸಾಗುತ್ತದೆ. ಜ್ಞಾನೋದಯಕ್ಕೆ ಮನೆಬಿಟ್ಟುಹೋದವ ನೆನಪಾಗಿ, ನಾನೂ ಎದ್ದುಹೊರಡಿಬಿಡಬೇಕೆಂಬ ತುಡಿತ ಹೆಚ್ಚಾಗಿಪರಿತ್ಯಾಗದ ವೇದಿಕೆ ಹತ್ತಲು ಮನಇನ್ನಿಲ್ಲದಂತೆ ಸಿದ್ಧವಾಗುತ್ತದೆ. ಏಳಬೇಕೆಂದವಳ ನಡು ಬಳಸಿ,ಕೊರಳ ಸುತ್ತಿ ಅಪ್ಪಿರುವ ‘ನಾಲ್ಕುಕೈಗಳ ಬಂಧನ ಬಿಡಿಸಿಕೊಳ್ಳುವುದುಹೇಗೆ?’ ಪ್ರಶ್ನೆ ಧುತ್ತೆಂದು ಕಾಡುತ್ತದೆ. ಲೋಕೋದ್ಧಾರಕ್ಕೆ ಹೊರಡಲಾಗದೆಭವಬಂಧನಕೆ ಸಿಲುಕಿರುವ ನಾನು,ಬದ್ಧತೆಯೇ ಇಲ್ಲದ ಬುದ್ಧಿಗೇಡಿಯೇ?!ಭಯವೂ ಸುಳಿದಾಡುತ್ತದೆ. ‘ಛೇ, ಬಿಡು ಇದನ್ನೆಲ್ಲಾ ಎದ್ದು ನಡೆ’……ಕಳ್ಳ ಮನಸ್ಸಿನ ಚಿತಾವಣೆ. ನಾನೇನೋ ಹೋಗಿಬಿಡುವೆ. ನಾಳೆಇವರೆಲ್ಲಾ ಹುಡುಕಾಡಿದರೆ, ಸ್ನಾನದಲಿಬಿಸಿನೀರಿಗೆ, ಹಸಿವಿನಲಿ ಅನ್ನಕೆ… ನನ್ನ ಸಮಸ್ತ ಗೆಳೆಯರ ಪಟ್ಟಿಹಿಡಿದು ‘ಯಾರೊಡನೆ ಹೋದಳುಇವಳೆಂದು?!’ ಉಳಿದ ಮಿತ್ರಜನಪರಿವಾರ ಕುಹಕವಾಡಿ ನಕ್ಕರೆ… ಲೋಕೋದ್ಧಾರಕ್ಕೆ ತೊಡಗಲೂ ನನಗೆ ಭಯವಾಗುತ್ತದೆ; ಇದನ್ನೆಲ್ಲಾ ನೆನೆದರೆ.. ಚಿಂತೆಗಳ ಸುಳಿವಲ್ಲಿ ನಡುರಾತ್ರಿಯಲಿಎದ್ದವಳು ಮತ್ತೆ ಹಾಗೆಯೇ ಬಿದ್ದುಕೊಳ್ಳುವೆ.ಅಪ್ಪಿಕೊಂಡವರೊಡನೆ ಮಲಗಿದರೆ ನನಗೆಜಗದೋದ್ಧಾರದ ಚಿಂತೆ ಮರೆತ ಗಾಢ ನಿದ್ದೆ *********************

ಜ್ಞಾನೋದಯದ ನಿದ್ದೆ Read Post »

ಕಾವ್ಯಯಾನ

ತುಟಿಗಳ ಮೇಲೆ ನಿನ್ನಿಯದೇ ಹೆಸರು

ಕವಿತೆ ನಾಗರಾಜ ಹರಪನಹಳ್ಳಿ ತಲೆಗೂದಲ ಮುದ್ದಿಸಬೇಕುಅವುಗಳ ಒಂದೊಂದೇ ಎಣೆಸುತಪ್ರೀತಿಸಬೇಕು ನಿನಗೆ ಊಹಿಸಲು ಅಸಾಧ್ಯಉಸಿರಲ್ಲಿ ಹೆಸರು ಬೆರೆಸುವಕಲೆ ನನಗೆ ಮಾತ್ರ ಗೊತ್ತು ಪ್ರೀತಿ ಅಂದರೆ ಹುಡುಗಾಟವಲ್ಲಅದು ಕಣ್ಬೆಳಕುಹಾಗಾಗಿಪ್ರತಿನೋಟದಲ್ಲಿ ನನ್ನ ಬಿಂಬ ದೂರ ತಳ್ಳಲಾಗದು ಒಲವುಅದು ಹಠಮಾರಿನಿನ್ನ ತುಟಿಗಳ ಮೇಲೆನಿನ್ನಿನಿಯದೇ ಹೆಸರು ಯಾರು ಏನೇ ಹೇಳಲಿಎಷ್ಟೇ ಹತ್ತಿರದವರಿರಲಿಪ್ರೇಮದ ಮುಂದೆಅವು ನಿಲ್ಲಲಾರವು ಹೃದಯದ ಬಡಿತವೇ ನಿಲ್ಲುವಕ್ಷಣ ಬಂದರೂಕೊನೆಯಲ್ಲಿ ನೆನಪಾಗುವುದುಇನಿಯ ದನಿಯೇ ಒಲವು ಮಳೆಅದನ್ನೆಂದೂ ಭೂಮಿ ನಿರಾಕರಿಸದುನದಿಯ ಎಷ್ಟೇ ಹಿಡಿದಿಟ್ಟರು ಅದರ ಚಲನೆ ಕಡಲಕಡೆಗೆ ನೀ ನಿನ್ನ ಮನಸ ಜೊತೆ ಮಾತಾಡುವುದೇ ಇನಿಯಎದುರಿಟ್ಟುಅದೇ ಬದುಕಿನ ಗುಟ್ಟು ಮನಸು ಬಂಡೇಳುತಿದೆನದಿಗೆ ಕಟ್ಟಿದ ಕಟ್ಟುಪಾಡುಗಳಮುರಿಯಲುತಲೆಯ ಮುಡಿ ಸಿಕ್ಕುಗಳಹೆಣಿಗೆಯಿಂದ ಬಿಡಿಸಿದಂತೆಬಂಧನಗಳ ಕಳಚಿಇನಿದಾರಿಯ ಕಡೆ ನಡೆಯಲುಅಕ್ಕ ಕದಳಿಯ ಕಡೆಗೆ ನಡೆದಂತೆ ಮಾತಾಡು ; ಎದೆಬಿಚ್ಚಿ ಮಾತಾಡುಮನಕೆ ಸಮಧಾನವಾಗುವತನಕಭವ ಬಂಧನದ ಚಾಡಿ ರಾಕ್ಷಸರ ಮಾತಿನಲಗಿನಿಂದ ಇರಿದು ಹಾಕುಆ ರಕ್ತದಲ್ಲಿ ಪ್ರೇಮದ ಓಘಜಗಕೆ ತಿಳಿಯಲಿಪ್ರೇಮ ವ್ಯಭಿಚಾರವಲ್ಲಅದು ಬೆಳಕೆಂದು ಒಲವೇ ಬಂದು ಬಿಡುನದಿಯಾಗಿ, ಸುಳಿವಗಾಳಿಯಾಗಿ,ಪ್ರೇಮದ ಕಡಲಾಗಿ**********************************************

ತುಟಿಗಳ ಮೇಲೆ ನಿನ್ನಿಯದೇ ಹೆಸರು Read Post »

ಇತರೆ, ಮಕ್ಕಳ ವಿಭಾಗ

ಬೆಕ್ಕು -ನಾಯಿಗಳ ಹುಲ್ಲಿನೌಷಧ!

ಅನುಭವ ಕಥನ(ಮಕ್ಕಳಿಗಾಗಿ) ವಿಜಯಶ್ರೀ ಹಾಲಾಡಿ   ‘ಮುದೂರಿ’ ಒಂದು ಸಣ್ಣ ಹಳ್ಳಿ.   ಅಲ್ಲಿ ವಿಜಿಯ ಮನೆ . ಅವರ ಊರಿನಲ್ಲಿ ಫರ್ಲಾಂಗು ದೂರಕ್ಕೊಂದೊಂದು ಮನೆಗಳು. ಆ ಊರು ಕಾಡು-ಗುಡ್ಡಗಳ ನಡುವೆ ಅವಿತುಕೊಂಡಿತ್ತು. ಜನರ ಸಂಖ್ಯೆಯೂ ಕಡಿಮೆ. ಅಲ್ಲಿಂದ ವಾಹನ ಓಡಾಡುವ ರಸ್ತೆ ತಲುಪಲು ಎರಡೂವರೆ ಮೈಲು ನಡೆದುಹೋಗಬೇಕಿತ್ತು. ಹಾಗೆ ಹೋದಾಗ ಸಿಗುವುದೇ ಹಾಲಾಡಿ. ಅಲ್ಲಿ ಕೆಲವು ಅಂಗಡಿಗಳು, ಪೋಸ್ಟ್ ಆಫೀಸ್, ಶಾಲೆ, ಹಾಲಿನ ಡೈರಿ, ಬ್ಯಾಂಕು ಇದ್ದವು . ಬಸ್ಸುಗಳು ಓಡಾಡುತ್ತಿದ್ದವು. ಡಾಕ್ಟರರನ್ನು ಕಾಣಬೇಕಾದರೆ ಅಲ್ಲಿಂದ ಬಸ್ಸು ಹತ್ತಿ ‘ಶಂಕರನಾರಾಯಣ’ ಎಂಬ ಪಕ್ಕದೂರಿಗೆ ಹೋಗಬೇಕಿತ್ತು. ಅಥವಾ ಇಪ್ಪತ್ತೈದು ಕಿಲೋಮೀಟರ್ ದೂರದಲ್ಲಿರುವ ತಾಲೂಕು ಕೇಂದ್ರವಾದ ಕುಂದಾಪುರಕ್ಕೆ ಧಾವಿಸಬೇಕಿತ್ತು. ಮುದೂರಿಯಲ್ಲಿ ಒಂದು ಬೆಂಕಿಪೊಟ್ಟಣ ಕೂಡಾ ಸಿಗಲು ಸಾಧ್ಯವಿರಲಿಲ್ಲ. ಅಗತ್ಯ ಬೇಕಾದ ವಸ್ತುಗಳನ್ನು ಹಾಲಾಡಿಯಿಂದ ತಂದು ಇಟ್ಟುಕೊಳ್ಳಬೇಕಿತ್ತು. ಹಾಗಾಗಿ ಅವರ ಊರಿನ ಜನ ತಮ್ಮಲ್ಲಿ ಇದ್ದುದರಲ್ಲೇ ಅಲ್ಪಸ್ವಲ್ಪ ಹೊಂದಿಸಿಕೊಂಡು ಎಲ್ಲಾ ವ್ಯವಸ್ಥೆಯನ್ನೂ ಮಾಡಿಕೊಳ್ಳುತ್ತಿದ್ದರು. ತೀರಾ ಅನಿವಾರ್ಯವಾದಾಗ ಮಾತ್ರ ದೂರದ ಪೇಟೆಪಟ್ಟಣಗಳಿಗೆ ಭೇಟಿಕೊಡುತ್ತಿದ್ದರು . ಆಹಾರಕ್ಕೆ ಬೇಕಾಗುವ ಅಕ್ಕಿ ,ಕಾಳು ,ತರಕಾರಿ ,ಸೊಪ್ಪು ಹಣ್ಣು ಮುಂತಾದುವನ್ನು ಬೆಳೆದುಕೊಳ್ಳುತ್ತಿದ್ದರು. ಜೊತೆಗೆ ಅಕ್ಕಪಕ್ಕದ ಕಾಡು ,ಬಯಲುಗಳಲ್ಲಿ ಬೆಳೆದ ತಿನ್ನಲಿಕ್ಕಾಗುವ ಹಣ್ಣು, ಕಾಯಿ ಗಡ್ಡೆ, ಎಲೆಗಳನ್ನು ಕೊಯ್ದು ಬಳಸುತ್ತಿದ್ದರು. ಆರೋಗ್ಯ ಸರಿಯಿಲ್ಲದಾಗ ಮನೆಯಲ್ಲೇ ಸಣ್ಣಪುಟ್ಟ ಮದ್ದು ಮಾಡಿಕೊಂಡು ಮತ್ತೂ ಗುಣವಾಗದಿದ್ದರೆ ವೈದ್ಯರನ್ನು ಕಾಣುತ್ತಿದ್ದರು. ದನಕರುಗಳಿಗೆ ಹಳ್ಳಿಯ ಪಂಡಿತರಲ್ಲಿ ಔಷದ ತಂದು ಕುಡಿಸುತ್ತಿದ್ದರು. ಇಂತಹ ವಿಷಯಗಳಿಗೆ ಸಂಬಂಧಿಸಿದ ಕೆಲ ನೆನಪುಗಳು ವಿಜಿಯ ಮನಸ್ಸಿನಲ್ಲಿ ಆಗಾಗ ಹಣಕಿಹಾಕುತ್ತಿರುತ್ತವೆ.  ಕಾಲಿಗೆ ಗರ್ಚ (ಕರಂಡೆ ,ಕವಳಿ )ನ ಗಿಡದ ಮುಳ್ಳು ಹೆಟ್ಟಿ ಅದೇ ಒಂದು ದೊಡ್ಡ ನೋವಾಗಿ ನಡೆದಾಡಲು ಆಗದೆ ಪುಟ್ಟ ವಿಜಿ ಹಾಸಿಗೆ ಹಿಡಿದ ಪ್ರಸಂಗ ಮೊದಲ ಪುಸ್ತಕದಲ್ಲಿ ಬಂದಿದೆ. ಆಗ ನೋವಿನ ತೀವ್ರತೆಗೆ ಜೋರು ಜ್ವರ ಕೂಡಾ  ಬಂದಿತ್ತು. ಅಮ್ಮ ಪ್ರತಿರಾತ್ರಿ ಮುಳ್ಳಿನ ಗಾಯಕ್ಕೆ ಸುಣ್ಣ ಹಚ್ಚಿ ಬಿಸಿಯಾದ ಒಲೆದಂಡೆಯ ಮೇಲೆ ಇಡಲು ಹೇಳುತ್ತಿದ್ದರು. ವಿಜಿ ಹಾಗೇ ಮಾಡುತ್ತಿದ್ದಳು. ಇದರಿಂದ ಗಾಯ ಬೇಗನೇ ಮಾಗಿ ಮೆದುಗೊಂಡು ಒಳಗಿರುವ ಮುಳ್ಳು ಹೊರಬರಲು ಸಹಾಯವಾಗುತ್ತದೆ ಎನ್ನುತ್ತಿದ್ದರು. ಇದಲ್ಲದೆ ತೋಟದಲ್ಲಿ ತಾನೇತಾನಾಗಿ ಬೆಳೆದು ಹಳದಿ ಹೂ ಬಿಡುವ ಕಡ್ಲಂಗಡ್ಲೆ  ಗಿಡದ ಎಲೆ ತಂದು ರಸ ಮಾಡಿ ಹಚ್ಚುತ್ತಿದ್ದರು . ಕೊನೆಗೊಂದು ದಿನ ಸೂಜಿಯಲ್ಲಿ ಕುತ್ತಿ ದೊಡ್ಡದಾದ ಮುಳ್ಳನ್ನು ಹೊರತೆಗೆದಾಗ ಒಂದು ಲೋಟದಷ್ಟು ರಶಿಗೆ (ಕೀವು) ಹೊರಬಂದು ಅಂಗಾಲಿನಲ್ಲಿ ದೊಡ್ಡ ಗಾಯವಾಗಿತ್ತು. ನೋವೆಂದು ಕಿರುಚಿ ಕುಣಿಯುತ್ತಿದ್ದ ವಿಜಿಗೆ ಸಮಾಧಾನವಾಗುವಂತೆ ಬಸಳೆಸೊಪ್ಪನ್ನು ಬಾಡಿಸಿ ಅದರ ರಸವನ್ನು ಹಚ್ಚಿದ್ದರು. ಆಗ ಸ್ವಲ್ಪ ತಣ್ಣ ತಣ್ಣಗೆ ಆಗಿ ಅವಳು ಅಳುವುದನ್ನು ನಿಲ್ಲಿಸಿದಳು. “ಬಸಳೆ ರಸ ಭಾರೀ ತಂಪು “ಎಂದು ಮುಳ್ಳು ತೆಗೆಯಲು ಬಂದಿದ್ದ ಶೇಷಿಬಾಯಿ, ರುಕ್ಮಿಣಿಬಾಯಿ ಹೇಳಿದ್ದರು.  ಜಿರಾಪತಿ ಸುರಿಯುವ ಮಳೆಗಾಲದ ನಾಲ್ಕು ತಿಂಗಳಲ್ಲಂತೂ ಅವರೂರಿನಲ್ಲಿ ಶೀತ, ಜ್ವರ ಮಾಮೂಲಿ ವಿಚಾರವಾಗಿತ್ತು. ಸೀನಿ ಸಾಕಾಗಿ ಮೂಗಿನಲ್ಲಿ ನೀರಿಳಿದು ಮೈಕೈ ನೋವು, ತಲೆಭಾರ ಆಗಿ ಮೈಯೆಲ್ಲಾ ಕೆಂಡದಂತೆ ಸುಡುತ್ತಾ ಸ್ವಸ್ಥ ನಿದ್ದೆ ಮಾಡಲೂ ಬಿಡದೆ ಜ್ವರ ಕಾಡುವಾಗ ಆರಂಭದಲ್ಲಿ ಜನರು ತಲೆಯೇ ಕೆಡಿಸಿಕೊಳ್ಳುತ್ತಿರಲಿಲ್ಲ. ಆಮೇಲೆ ಕಾಳು ಮೆಣಸಿನ ಕಷಾಯ ಮಾಡುತ್ತಿದ್ದರು. ಕಾಳುಮೆಣಸು ಬೆಳೆಯುವುದು ತೋಟದ ಅಡಕೆ, ತೆಂಗಿನ ಮರಕ್ಕೆ ಹಬ್ಬುವ ಬಳ್ಳಿಯಲ್ಲಿ. ಆರಂಭದಲ್ಲಿ ಹಸಿರಾಗಿದ್ದು ಹಣ್ಣಾದ ಮೇಲೆ ಕೆಂಪಾಗಿ, ಕೊಯ್ದು ಒಣಗಿಸಿದ ನಂತರ ಕಪ್ಪಾಗುತ್ತದೆ.  ಇದು ಚಿಕ್ಕ ಚಿಕ್ಕ ಕಾಳಿನಂತಹಾ ಮೆಣಸು. ಇದನ್ನು ಡಬ್ಬಗಳಲ್ಲಿ ಸಂಗ್ರಹಿಸಿಡುತ್ತಿದ್ದರು. ಕಷಾಯ ಮಾಡುವಾಗ ಒಂದರ್ಧ ಮುಷ್ಟಿ ತೆಗೆದುಕೊಂಡು ಚೆನ್ನಾಗಿ ಕುಟ್ಟಿ ನೀರು -ಬೆಲ್ಲ ಬೆರೆಸಿ ಕುದಿಸುತ್ತಿದ್ದರು. ಒಂದ್ಹತ್ತು ನಿಮಿಷ ಕುದಿದ ಮೇಲೆ ಕಷಾಯ ತಯಾರಾಗುತ್ತದೆ. ಇದನ್ನು ಸೋಸಿ ಕುಡಿದರೆ ಜೋರು ಖಾರ!  ವಿಜಿಗೆ ಖಾರ ಇಷ್ಟವಿಲ್ಲದಿದ್ದರೂ ಕುಡಿಯಲೇಬೇಕು. ಅವಳಿಗೆ ಆಗಾಗ ಜ್ವರ ಬರುತ್ತಿತ್ತು. ಸಪೂರಕ್ಕಿದ್ದ ವಿಜಿಗೆ ಏನೂ ತಿನ್ನದೇ ನಿಶ್ಶಕ್ತಿಯಿಂದಲೇ ಜ್ವರ ಬರುವುದೆಂದು ಅಮ್ಮ ದೂರುತ್ತಿದ್ದರು. ಅವರ ಮನೆಯಲ್ಲಿ ಶೋಲಾಪುರ (ಸೊಲ್ಲಾಪುರ) ಹೊದಿಕೆಗಳಿದ್ದವು. ಅಪ್ಪಯ್ಯ ಯಾವಾಗಲೂ ಅವುಗಳನ್ನೇ ತರುತ್ತಿದ್ದುದು. ವಿಜಿ ನೋಡಿದ ಹೊದಿಕೆಗಳಲ್ಲೆಲ್ಲ ಇವೇ ಅತ್ಯುತ್ತಮವಾದವು. ಉದ್ದ- ಅಗಲ ಹೆಚ್ಚು ಇರುವುದರ ಜೊತೆಗೆ ದಪ್ಪ ಇರುತ್ತವೆ. ಆದರೆ ದಿನಗಳಲ್ಲೂ ಹೊದ್ದುಕೊಳ್ಳಬಹುದು. ಸೆಕೆಗೆ ತಣ್ಣಗೆ ಇರುತ್ತವೆ. ಚಳಿ ಬಂದಾಗ ಎರಡೆರಡು ಹೊದಿಕೆ ಹೊದ್ದು ಮೇಲೊಂದು ರಗ್ಗು ಹಾಕಿಕೊಳ್ಳಬೇಕು. ಶೋಲಾಪುರ ಹೊದಿಕೆಯ ಡಿಸೈನ್ಗಳೂ ಚಂದ . ಈ ಎಲ್ಲ ಕಾರಣಕ್ಕಾಗಿ ಅವಳಿಗೆ ಶೋಲಾಪುರ ಹೊದಿಕೆಗಳೆಂದರೆ ಬಹಳ ಇಷ್ಟ. ಆದರೆ ಜ್ವರ ಬಂದ ರಾತ್ರಿಗಳಲ್ಲಿ ಆಗುತ್ತಿದ್ದುದೇ ಬೇರೆ. ಆಗ ಜ್ವರ ತಲೆಗೇರಿ ಹೊದಿಕೆಯ ಬಣ್ಣದ ಚಿತ್ತಾರಗಳು ರಾಕ್ಷಸಾಕಾರ ತಾಳಿ ಬಂದು ಹೆದರಿಸುತ್ತಿದ್ದವು. ಅರೆನಿದ್ದೆಯಲ್ಲಿರುತ್ತಿದ್ದ ವಿಜಿ ಹಲ್ಲುಮಟ್ಟೆ ಕಚ್ಚಿ ಕೈ ಮುಷ್ಟಿ ಬಿಗಿದುಕೊಂಡು ರಾಕ್ಷಸಾಕಾರಗಳನ್ನು ನೋಡುತ್ತಿದ್ದುದು ಮರೆತೇ ಹೋಗುವುದಿಲ್ಲ .ಹೀಗಾಗಿ ಜ್ವರವೆಂದರೆ ಕೆಟ್ಟ ಕನಸಿನಂತೆ ಅವಳಿಗೆ. ಇಂತಹ ಸಂದರ್ಭದಲ್ಲಿ ಕಾಳು ಮೆಣಸಿನ ಕಷಾಯ ಕುಡಿಯದಿದ್ದರೆ ಅಜ್ಜಿ ಹೊಡೆಯುತ್ತಾರೆಂಬ ಕಾರಣಕ್ಕಾದರೂ ಕುಡಿದೇ ಕುಡಿಯುತ್ತಿದ್ದಳು. ಸುಮಾರು ಏಳೆಂಟು ದಿನವಾದರೂ ಜ್ವರ ಬಿಡದಿದ್ದರೆ ಆಸ್ಪತ್ರೆಗೆ ಹೋಗಬೇಕಿತ್ತು. ಆಚೆಮನೆ ದೊಡ್ಡಮ್ಮ ಜ್ವರ, ಗಂಟಲುನೋವು ಬಂದರೆ ಈರುಳ್ಳಿ, ಶುಂಠಿ, ಕಾಳುಮೆಣಸು ಎಲ್ಲಾ ಸೇರಿಸಿ ಕಷಾಯ ಮಾಡಿ ಕುಡಿಯುತ್ತಿದ್ದರು.” ನಂಗೆ ಗಂಟ್ಲ್ ನೋವ್. ನೀರುಳ್ಳಿ ಸುಟ್ಕಂಡ್, ಬೆಲ್ಲ ಹಾಯ್ಕಂಡ್ ತಿಂದೆ” ಅಂತ ಆಗಾಗ ಹೇಳುತ್ತಿದ್ದರು. ಅಜ್ಜಿಗೆ ಜ್ವರ ಬರುತ್ತಿದ್ದುದು ಕಮ್ಮಿ. ಬಂದರೆ ಮಾತ್ರ ಜೋರಾಗಿಬಿಡುತ್ತಿತ್ತು. ಅವರಿಗೆ ಜ್ವರ ಬಂದಾಗ ನಾಲಗೆ ರುಚಿ ಇರುತ್ತಿರಲಿಲ್ಲ. ಅಂತಹ ಸಂದರ್ಭದಲ್ಲಿ ಅಡುಗೆ ಚೆನ್ನಾಗಿಲ್ಲವೆಂದು ಅಮ್ಮನಿಗೆ ಬಯ್ಯುತ್ತಿದ್ದುದೂ ಇದೆ! ಕಟ್ಟಗಿನ ಮಿಡಿ ಉಪ್ಪಿನಕಾಯಿ ರಸವನ್ನು ನಾಲಗೆಗೆ ತಾಗಿಸಿಕೊಂಡು ಒಂದೆರಡು ತುತ್ತು ತಿಂದು ಬೇಡವೆಂದು ಎದ್ದುಹೋಗುತ್ತಿದ್ದರು. ಆಮೇಲೆ ಕಷಾಯ ಕುಡಿದು ಕಂಬಳಿ ಹೊದ್ದು ಮಲಗುತ್ತಿದ್ದರು. ಆದರೆ ಅಮ್ಮ ಹಾಗಲ್ಲ, ಜ್ವರ ಬಂದಾಗಲೂ ಸ್ವಲ್ಪ ಊಟ ಮಾಡಿ ಆಗಾಗ ಕಷಾಯ ಕುಡಿದು ಬೇಗನೆ ಗುಣ ಮಾಡಿಕೊಳ್ಳುತ್ತಿದ್ದರು.  ಮುದೂರಿ ಮತ್ತು ಆಸುಪಾಸಿನಲ್ಲಿ ನರ್ಸಿಹಾಂಡ್ತಿ, ಅಕ್ಕಣಿಬಾಯಿ ಮುಂತಾದ ಸೂಲಗಿತ್ತಿಯರಿದ್ದರು. ಪೈಕನಾಯ್,ಕ ಸುಬ್ಬನಾಯ್ಕ ಎಂಬ ನಾಟಿ ವೈದ್ಯರಿದ್ದರು.  ಜನರಿಗೆ ಮತ್ತು ದನಕರುಗಳಿಗೂ ಇವರುಮದ್ದು ಕೊಡುತ್ತಿದ್ದರು. ಗಂಟಿ (ದನಕರು)ಗಳಿಗೆ ಹುಷಾರಿಲ್ಲದಾಗ ದೊಡ್ಡ ದೊಡ್ಡ ಬಾಟಲಿಗಳಲ್ಲಿ ಪೈಕ ನಾಯ್ಕ ಕೊಡುವ ಕಪ್ಪು ದ್ರವವನ್ನು ತಂದು ನೆಳಾಲಿಗೆ ಹಾಕಿ ಕುಡಿಸುತ್ತಿದ್ದರು. ಅವು ಹೆದರಿಕೆಯಲ್ಲಿ ಕುಣಿದಾಡುತ್ತಾ, ಅರ್ಧ ಉಗಿದು ಸೀನುತ್ತಾ ಹೇಗೋ ಸ್ವಲ್ಪ-ಸ್ವಲ್ಪ ನುಂಗಿ ಆರೋಗ್ಯರಕ್ಷಣೆ ಮಾಡಿಕೊಳ್ಳುತ್ತಿದ್ದವು!  ಬೆಕ್ಕುಗಳಾದರೆ ಹೀಗಲ್ಲ ; ತಮ್ಮಆರೋಗ್ಯದ ಬಗ್ಗೆ ತಾವೇ ಆದಷ್ಟು ಜಾಗ್ರತೆ ವಹಿಸುತ್ತಿದ್ದವು!!  ತಿಂಗಳಿಗೆರಡು ಸಲವಾದರೂ ಎಳೆಹುಲ್ಲನ್ನು ತಿಂದು ವಾಂತಿ ಮಾಡಿಕೊಳ್ಳುತ್ತಿದ್ದವು. ಹಾಗೆ ಮಾಡಿದಾಗ ಅವುಗಳ ಹೊಟ್ಟೆಯಲ್ಲಿ ಅಜೀರ್ಣದ ಅಂಶ ಇದ್ದರೆ ಹೋಗಿಬಿಡುತ್ತದಂತೆ. ಬೆಕ್ಕುಗಳನ್ನು ನೋಡಿ ನಾಯಿಗಳೂ ಇದನ್ನು ಕಲಿತು ಅಳವಡಿಸಿಕೊಂಡಿದ್ದವು!  ಹುಲ್ಲು ತಿನ್ನುವುದು; ವಾಂತಿ ಮಾಡುವುದು!  ಇನ್ನು ಬೆಕ್ಕುಗಳು ಇಡೀ ದಿನ ಒಲೆಯ ಹತ್ತಿರ ಅಥವಾ ಅಕ್ಕಿಮುಡಿ, ಅಟ್ಟ ಹೀಗೆ ಮನೆಯ ಬೆಚ್ಚಗಿನ ಜಾಗದಲ್ಲೇ ಮಲಗುತ್ತಿದ್ದುದರಿಂದ ಜ್ವರ ಗಿರ ಬಾಧಿಸುವ ಚಾನ್ಸೇ ಇರಲಿಲ್ಲ !ಅದೇನೇ ಇರಲಿ, ಅಮ್ಮ ಬೆಕ್ಕುಗಳಿಗೆ ಆಗಾಗ ಅನ್ನಕ್ಕೆ ತೆಂಗಿನೆಣ್ಣೆ ಹಾಕುತ್ತಿದ್ದರು. “ಅದಕ್ಕೆ ಅದೇ ಔಷಧ ಯಾವುದೇ ಕಾಯಿಲೆ ಬರುವುದಿಲ್ಲ” ಎನ್ನುತ್ತಿದ್ದರು. ದಿನಾಲೂ ಕಾಯಿ ಹೆರೆಯುವಾಗ ತುರಿಯನ್ನು ಹಾಕುತ್ತಿದ್ದರು. ನಾಯಿಗಳಿಗೆ ಟೀ ಕಣ್ಣ್ (ಟೀ ಡಿಕಾಕ್ಷನ್) ಮಾಡಿ ಹಾಕುತ್ತಿದ್ದರು . ಅದನ್ನು ಕುಡಿದರೆ ಅವುಗಳಿಗೆ ಹುಳದ ಉಪದ್ರ ಇರುವುದಿಲ್ಲ ಎಂಬುದಾಗಿ ಜನರ ಅಭಿಪ್ರಾಯ. ಇನ್ನು ಬೆಕ್ಕು ,ನಾಯಿಗಳು ವಿಷದ ವಸ್ತು ತಿಂದದ್ದು ಗೊತ್ತಾದರೆ ಉಪ್ಪು ನೀರು ಕುಡಿಸಿ ವಾಂತಿ ಮಾಡಿಸಿ ಪ್ರಥಮ ಚಿಕಿತ್ಸೆ ಮಾಡುತ್ತಿದ್ದರು. ಬಿಸಿಲು- ಚಳಿ -ಮಳೆಯೆನ್ನದೆ ಗದ್ದೆಗಳಲ್ಲಿ ಕಷ್ಟದ ಕೆಲಸ ಮಾಡುವ ಹೋರಿಗಳಿಗೆ ವರ್ಷದ ಕೊನೆಯಲ್ಲಿ ಹದ್ನದ ದಿನ ಹಂಗಾರ್ ಕೆತ್ತೆಯ ಗಂಜಿ ಮಾಡಿ ಬಡಿಸುತ್ತಿದ್ದರು. ಅದು ಕಹಿಯಿರುತ್ತದೆಂದು  ಅದಕ್ಕೆ ಬೆಲ್ಲ ಕೂಡ ಹಾಕುತ್ತಿದ್ದರು. ಆ ದಿನ ಅವುಗಳಿಗೆ ಸ್ನಾನ ಮಾಡಿಸಿ ಮೈಗೆಲ್ಲಾ ಎಣ್ಣೆ ಹಚ್ಚುತ್ತಿದ್ದರು. ವರ್ಷವಿಡೀ ದುಡಿದ ಎಲ್ಲರಿಗೂ ಹದ್ನದ ದಿನ ಪಾಯಸದ ಊಟ ಇರುತ್ತಿತ್ತು. ಇದಾದ ನಂತರ ಹೋರಿಗಳಿಗೆ, ಶ್ರಮಿಕರಿಗೆ ಗದ್ದೆಯಲ್ಲಿ ಮಾಡುವ ಕಷ್ಟದ ಕೆಲಸದಿಂದ ಸ್ವಲ್ಪ ಸಮಯ ಬಿಡುವು.  ಹಲ್ಲು ನೋವು, ತಲೆನೋವು ,ಬೆನ್ನುನೋವು, ಕಾಲು ನೋವು, ಹಾವು ಕಚ್ಚಿದ್ದು , ಚೇಳು ಕಚ್ಚಿದ್ದು ಹೀಗೆ ಪ್ರತಿಯೊಂದಕ್ಕೂ ಹಳ್ಳಿಗರಲ್ಲಿ ಏನಾದರೊಂದು ಔಷಧದ ಮಾಹಿತಿ ಇರುತ್ತಿತ್ತು. ಕೆಲವರಂತೂ ಬಾಯಿ ತೆಗೆದರೆ ಆ ಸೊಪ್ಪು, ಈ ಬಳ್ಳಿ ,ಇನ್ಯಾವುದೋ ಬೇರು ಎಂದು ಮದ್ದುಗಳನ್ನು ಸೂಚಿಸುತ್ತಿದ್ದರು. ಇವುಗಳಲ್ಲಿ ಕೆಲವಂತೂ ಒಳ್ಳೇ ಪ್ರಭಾವ ಬೀರುತ್ತಿದ್ದವು. ‘ದಶಮೂಲಾರಿಷ್ಟ’ ಎಂಬ ಗಿಡಮೂಲಿಕೆಗಳ ಔಷಧವೊಂದು ಆಗ ಅಲ್ಲಿನ ಜನರ ಸರ್ವರೋಗ ನಿವಾರಕ ಎಂಬಂತಿತ್ತು!  ಅಜೀರ್ಣ ಅಥವಾ ಥಂಡಿ ಆದಾಗ ಮೊದಲು ಅದನ್ನೇ ಕುಡಿಯಲು ಕೊಡುತ್ತಿದ್ದರು. ಮನುಷ್ಯರಿಗಷ್ಟೇ ಅಲ್ಲದೆ ಜಾನುವಾರುಗಳಿಗೂ, ಬೆಕ್ಕು -ನಾಯಿಗೂ ಸುಮಾರು ಕಾಯಿಲೆಗೆ ಇದೇ ಮದ್ದಾಗಿತ್ತು! ಇನ್ನು; ಹುಟ್ಟಿದ ಮಕ್ಕಳ ಎಳೆನಾಲಿಗೆಗೆ ‘ಬಜೆ’ ಹಾಕುತ್ತಿದ್ದರು . ಅಂದರೆ ಬಜೆ, ಹಿಪ್ಪಲಿ, ಜಾಯಿಕಾಯಿ ಎಂಬ ಮೂಲಿಕೆಗಳನ್ನು ತೇಯ್ದು ಚೂರು ಜೇನುತುಪ್ಪದೊಂದಿಗೆ ಸೇರಿಸಿ ನೆಕ್ಕಿಸುತ್ತಿದ್ದರು. ಇದನ್ನು ದಿನವೂ ಸಂಜೆ ಹೊತ್ತಿಗೆ ತಪ್ಪದೇ ಮಾಡುತ್ತಿದ್ದರು. ಮಗುವಿಗೆ ಹೊಟ್ಟೆ ನೋವು ಬಾರದೆ  ಚೆನ್ನಾಗಿ ನಿದ್ದೆ ಮಾಡುತ್ತದೆ ಮತ್ತು ಸ್ಪಷ್ಟವಾಗಿ ಮಾತು ಕಲಿಯುತ್ತದೆ ಎನ್ನುತ್ತಿದ್ದರು. ಸಣ್ಣ ಮಕ್ಕಳಿಗೆ ಜ್ವರ ಬಂದಾಗ ಸಂಬಾರ್ ಬಳ್ಳಿ ಸೊಪ್ಪನ್ನು (ದೊಡ್ಡಪತ್ರೆ ) ಬಾಡಿಸಿ ರಸ ತೆಗೆದು ಕುಡಿಸುತ್ತಿದ್ದರು . ಇನ್ನೂ ಕೆಲವು ಸಂಬಾರ ಪದಾರ್ಥಗಳನ್ನು ದಿನನಿತ್ಯದ ಊಟದಲ್ಲಿ ಬಳಕೆ ಮಾಡುತ್ತಾ ಅವುಗಳಿಂದ  ಔಷಧೀಯ ಅಂಶಗಳನ್ನು ಪಡೆಯುತ್ತಿದ್ದರು. ಕೊತ್ತಂಬರಿ, ಜೀರಿಗೆ, ಮೆಂತ್ಯೆ, ಸಾಸಿವೆ, ಅರಿಶಿನ ಹಾಕದೆ ಸಾಂಬಾರು ಆಗುವುದಿಲ್ಲ. ಬೆಳ್ಳುಳ್ಳಿ, ಶುಂಠಿ ಕಾಳುಮೆಣಸು, ಜೀರಿಗೆ, ಓಮ, ಏಲಕ್ಕಿ, ಲವಂಗ ,ಚಕ್ಕೆ ,ಜಾಯಿಕಾಯಿ ಆಗಾಗ ಬಳಸುತ್ತಲೇ ಇರುತ್ತಿದ್ದರು. ತ್ರಾಣಿ ಮೊದಲಾದ ಸೊಪ್ಪಿನ ಕಷಾಯಗಳನ್ನು ಮಾಡಿ ಕುಡಿಯುತ್ತಿದ್ದರು.  ಆಸ್ಪತ್ರೆಗಳಾಗಲಿ, ವೈದ್ಯರ ಸಹಾಯವಾಗಲಿ ಸುಲಭಕ್ಕೆ ದೊರಕದ ಆ ಕಾಲದಲ್ಲಿ ಜನರಿಗೆ ಆದಷ್ಟು ಕಾಯಿಲೆಗಳೇ ಬರದಂತೆ ಆರೋಗ್ಯ ರಕ್ಷಿಸಿಕೊಳ್ಳುವುದು ಅನಿವಾರ್ಯವಾಗಿತ್ತು. ಅನಾರೋಗ್ಯವಾದಾಗ ಆಗುವ ಅನಾಹುತಗಳ ಬಗ್ಗೆ ಭಯವಿತ್ತು. ನಿಸರ್ಗಸಹಜ ಆಹಾರ  ಬಳಸುತ್ತಾ ಹುಷಾರಿಲ್ಲದಾಗ ಹಳ್ಳಿಯ ಮದ್ದು ಮಾಡುತ್ತಾ ಸುಧಾರಿಸಿಕೊಳ್ಳುತ್ತಿದ್ದರು. ಶುದ್ಧ ನೀರು ,ಗಾಳಿ ,ಆಹಾರ ಸೇವಿಸುತ್ತಿದ್ದುದರಿಂದ ಕಾಯಿಲೆ ಕಸಾಲೆಗಳೂ ಕಮ್ಮಿಯಿದ್ದವು . **************************

ಬೆಕ್ಕು -ನಾಯಿಗಳ ಹುಲ್ಲಿನೌಷಧ! Read Post »

ಕಥಾಗುಚ್ಛ

ಸಹನೆಯ ತೇರು

ಕಥೆ ಸುಧಾ ಹಡಿನಬಾಳ.            ರೀ, ನಿನ್ನೆ  ಅವರೆಲ್ಲಾ ನಗ್ ನಗ್ತಾ ಮಾತಾಡ್ತಿರ್ವಾಗ ನೀವ್ಯಾಕ್ರಿ ಮಂಕಾಗಿ ಕುತಿದ್ರಿ? ನೀವೂ ನಗ್ತಾ ಮಾತಾಡ್ತಾ ಇದ್ರೆ ನಂಗೆ ಎಷ್ಟು ಖುಷಿ ಆಗ್ತಿತ್ತು ಗೊತ್ತಾ’ ಎನ್ನುತ್ತ ನಿನ್ನೆಯ ಅಮ್ಮನ ಮನೆ ಸಡಗರದ ಗುಂಗಲ್ಲೇ ಗಂಡನ ಕೊರಳಿಗೆ ಜೋತು ಬಿದ್ದು ಲಲ್ಲೆಗರೆದಳು ಸ್ವಾತಿ. ಅಷ್ಟೇ ನಿರ್ದಾಕ್ಷಿಣ್ಯವಾಗಿ ಅವಳ ಕೈಗಳನ್ನು ತಳ್ಳಿ ‘ ಒಹೋ, ನಿನ್ ತರನೆ ಕಂಡವರ ಜೊತೆ ಎಲ್ಲಾ ಹಲ್ ಕಿರ್ದು ನಗ್ಬೇಕಿತ್ತಾ? ನಿಂಗೆ ನೀನು ಮದುವೆ ಆಗಿರೋಳು ಅನ್ನೋದೆ ಮರ್ತು ಹೋದಂತಿದೆ. ನಂಗಿದೆಲ್ಲ ಒಂಚೂರು ಇಷ್ಟ ಆಗೋದಿಲ್ಲ. ಈಗ್ಲೆ ಹಿಂಗಿರೋಳು ಮದುವೆಗೆ ಮುಂಚೆ ಹೇಗಿದ್ಯೊ ಏನ್ ಕತೆನೊ. ಇನ್ಮುಂದೆ ಅಲ್ಲಿ ಹೋಗಿ  ಮೊದಲಿಂತರ ಇರೋ ಕನಸು ಕಾಣ್ಬೇಡ ಹಾಂ’ ಎನ್ನುತ್ತಾ ಬೋರಲಾಗಿ ಮುಸುಕು ಎಳೆದುಕೊಂಡ. ಗಂಡನ ಮಾತಿನ ತೀಕ್ಷ್ಣತೆಗೆ, ಒಳಾರ್ಥಕ್ಕೆ ಸ್ವಾತಿ ನಲುಗಿ ಹೋದಳು.          ‌‌ ‌‌‌ ‌‌‌                   ಸ್ವಾತಿ ಕಿಲಕಿಲ ನಗುವ ಉತ್ಸಾಹದ ಚಿಲುಮೆಯಾಗಿದ್ದವಳು. ಇಡೀ ಊರಿಗೆ ಯುವರಾಣಿ ಹಾಗೆ ರಾಜಾರಸ್ಸಾಗಿ ಸಮುದ್ರ, ಹೊಲ- ಗದ್ದೆ ಹೀಗೆ ಎಲ್ಲೆಡೆ ತನ್ನ ಓರಗೆಯವರು, ಊರ ಹೈಕಳ ದಂಡು ಕಟ್ಟಿಕೊಂಡು ನಾಟಕ, ಡಾನ್ಸ ಅಂತ ನಲಿದಾಡ್ತಾ ಇರೊ ನವಿಲು ಅವಳು. ಅಪ್ಪನ ಜೊತೆ ಕತ್ತಿ ಹಿಡಿದು ತೋಟಕ್ಕೆ ಬಿಟ್ರು ಸೈ, ಅಡುಗೆ ಮನೆಯಲ್ಲಿ ಎಂಟಾಳಿಗೆ ಅಡಿಗೆ ಮಾಡಿ ಬಡಿಸೋಕು ಜೈ ಅಂತಿರೋಳು. ಹೆಸರಿಗೆ ತಕ್ಕ ಹಾಗೆ ಅಪರೂಪದ ಸ್ವಾತಿ ಮುತ್ತು. ಇಂತ ಮಗಳನ್ನ ಒಲ್ಲದ ಮನಸ್ಸಿನಿಂದ ಒಳ್ಳೆಯ ಸಂಬಂಧ , ಒಬ್ಬನೇ ಮಗ, ಅಲ್ಲೂ ರಾಜಕುಮಾರಿ ತರ ಇರ್ಬಹುದು ಅಂತ ಹೆತ್ತವರು ಮಹೇಶನಿಗೆ ಧಾರೆ ಎರೆದು ಕೊಟ್ಟರು. ಊರು – ಕೇರಿಯ  ಪ್ರೀತಿ,ಆಶೀರ್ವಾದದೊಂದಿಗೆ  ಬೆಳಕಿನ ಕಿರಣವಾಗಿ, ಮಹೇಶನ ಭಾಗ್ಯವಾಗಿ ಮನೆ ತುಂಬಿ ಬಂದವಳು ಸ್ವಾತಿ.ಆದರೆ ಅವನಿಗದು ಬೇಕಿರಲಿಲ್ಲ. ಹೇಳಿಕೊಳ್ಳಲೇನೂ ಕೊರತೆ ಇಲ್ಲ. ಮಿತಭಾಷಿ ಅತ್ತೆ, ಆಳು- ಕಾಳು , ತೋಟ, ಸ್ವಂತ ಟ್ಯಾಕ್ಸಿ ಓಡಿಸುವ ಗಂಡ. ಆದರೆ ಮದುವೆ ಸ್ವಾತಿಯ ಪಾಲಿಗೆ ಮಧುರ ಅನುಭವ ನೀಡಲಿಲ್ಲ.; ಸರಸ- ಸಲ್ಲಾಪದ ರಸ ನಿಮಿಷಗಳಾಗಿರಲಿಲ್ಲ. ಮಹೇಶನಿಗೆ ಹೆಂಡತಿಯಲ್ಲಿ ಯಾವ ಆಸಕ್ತಿ ಇಲ್ಲ. ಬೇಕಾದಾಗ ಮಡಿಲಿಗೆ ಬಂದರೆ ಮುಗಿಯಿತು. ಪಿಸು ಮಾತು, ಬಿಸಿಯಪ್ಪುಗೆ ಬೇಕಿರಲಿಲ್ಲ. ಅವಳ ಕಿಲಕಿಲ ನಗು ಅವನಿಗೆ ವರ್ಜ್ಯ. ಅದಕ್ಕೆ ಮದುವೆಯಾದ ಹೊಸದರಲ್ಲೇ ಬ್ರೇಕ್ ಹಾಕಿದ್ದ. ಅವಳ ಸೌಮ್ಯ ವದನ, ಸಹನೆಯನ್ನು ಕೆಣಕಿ ಕೊಂಕು ತೆಗೆಯುತ್ತಿದ್ದ.ಯಾವುದಕ್ಕೂ ಸೊಲ್ಲೆತ್ತದ ಸ್ವಾತಿ ಹೆಚ್ಚು – ಕಮ್ಮಿ ನಗುವುದನ್ನೇ ಮರೆತಿದ್ದಳು.ಗಂಡನ ವಿಚಿತ್ರ ವರ್ತನೆಗೆ ಕಾರಣ ಗೊತ್ತಿಲ್ಲದೆ ತಡಕಾಡುತ್ತಿದ್ದಳು. ಕಾಲ ಹೀಗೆ ಉರುಳುತ್ತಿರಲು ಸ್ವಾತಿಯ ಮಡಿಲಲ್ಲಿ ಮುದ್ದು ಕೂಸೊಂದು ಅರಳಿತ್ತು. ಮೂರು ತಿಂಗಳ ಕೂಸಿನೊಂದಿಗೆ ಮರಳಿ ಬಂದ ಸ್ವಾತಿ ಗಂಡನ ನಡೆಯಲ್ಲಿನ ಏರುಪೇರನ್ನು ಗುರುತಿಸಿದಳು. ಮೊದಲಿನಂತೆ ಮನೆಗೆ ಸರಿಯಾಗಿ ಬರುತ್ತಿಲ್ಲ. ಬಂದರೂ ತಡವಾಗಿ ಕುಡಿದು ಬರುತ್ತಿದ್ದ.ಪ್ರಶ್ನಿಸಿದರೆ ಏರು ದನಿಯಲ್ಲಿ ಗದರಿ ರಂಪಾಟ ಮಾಡಿ ಬಾಯಿ ಮುಚ್ಚಿಸುತ್ತಿದ್ದ. ಒಂದಿನ ಅಕ್ಕಿ ಗೇರುವಾಗ ಸ್ವಾತಿಯ ಅಸಹಾಯಕ ಮೌನವನ್ನು ಗ್ರಹಿಸಿ ಮನೆಯಾಳು ಮಂಜಮ್ಮ ಸತ್ಯ ಬಾಯ್ಬಿಟ್ಟಳು. ಗಂಡನ ಈ ಅನೈತಿಕ ಸಂಬಂಧವನ್ನು ಸಹಿಸಲಾರದೆ ಮುದ್ದು ಮಗಳ ಮುಂದೆ ಕಣ್ಣೀರಾಗುವುದೊಂದೆ ಸಮಾಧಾನದ ಕ್ಷಣ.ಇನ್ನೇನು ಮಾಡಿಯಾಳು? ಅವಳ ಸಹನೆ ಎಲ್ಲವನ್ನೂ ಮೌನವಾಗಿ ಒಪ್ಪಿಕೊಂಡಿತ್ತು. ಎಲ್ಲಕ್ಕೂ ಕಾಲವೆ ಪಾಠ ಕಲಿಸುತ್ತದಲ್ಲವೆ?            ‌‌‌                                ಅದೊಂದು  ರಾತ್ರಿ ಕುಡಿದ ಅಮಲಿನಲ್ಲಿ ಟ್ಯಾಕ್ಸಿ ಓಡಿಸಿಕೊಂಡು ಬರುವಾಗ ನಿಂತ ಲಾರಿಗೆ ಗುದ್ದಿಕೊಂಡು ಮಣಿಪಾಲ ಸೇರಿದ. ತಲೆಗೆ ಬಲವಾಗಿ ಏಟು ಬಿದ್ದ ಕಾರಣ ಮೆದುಳು ದೇಹದ ಮೇಲಿನ ಹಿಡಿತ ಕಳೆದುಕೊಂಡಿತ್ತು. ವೈದ್ಯರೆ ಅಸಹಾಯಕರಾಗಿ ಇರುವಷ್ಟು ದಿನ ಹೀಗೆ ಮನೆಯಲ್ಲಿ ಇರಲಿ ; ಬೇರಾವ ಚಿಕಿತ್ಸೆಯೂ ಇಲ್ಲ ಎಂದಾಗ ಜೀವಂತ ಶವದಂತೆ ಮನೆ ಸೇರಿದ್ದ.. ಸ್ವಾತಿ ಟೊಂಕ ಕಟ್ಡಿ ಈ ಅಗ್ನಿ ಪರೀಕ್ಷೆಯನ್ನೂ ಎದುರಿಸಿದಳು. ಬಿದ್ದಲ್ಲೆ ಬಿದ್ದು ನಾರುವ ಎಲ್ಲವೂ ಸರಿ ಇದ್ದಾಗ ಗುರ್ ಎಂದು ಗೂಳಿಯಂತೆ ಗುಟುರುವ ಗಂಡನ ಕೊಳಕು ಬಳಿದು ,ಕುಂಡೆ ತೊಳೆದು ಕಲ್ಲಾಗಿದ್ದಳು. ಹೀಗೆ ನಾಲ್ಕು ವರ್ಷ ಕಳೆಯಿತು. ಆರಕ್ಕೇರಲಿಲ್ಲ ಮೂರಕ್ಕಿಳಿಯಲಿಲ್ಲ ಅವನ ಆರೋಗ್ಯ. ಅದೊಂದು ಮಳೆಗಾಲದ ರಾತ್ರಿ ಉಣಿಸಿ ಕಂಬಳಿ ಹೊದೆಸಿ ತುಸು ದೂರದಲ್ಲಿ ಮಲಗಿದ್ದಳು ಸ್ವಾತಿ. ಇದ್ದಕ್ಕಿದ್ದಂತೆ ಕೆಮ್ಮಲಾರಂಭಿಸಿದ ಗಂಡನ ತಲೆ ,ಬೆನ್ನು ನೀವುತ್ತಾ ನೀರು ಕುಡಿಸಲು ಮುಂದಾದ ಮಡದಿಯ ಕೈಯಲ್ಲೆ ಕತ್ತು ವಾಲಿಸಿ ಉಸಿರು ನಿಲ್ಲಿಸಿಬಿಟ್ಡ. ಬತ್ತಿ ಹೋದ ಅವಳ ಕಂಗಳಲ್ಲಿ ಮತ್ತೆ ನೀರು ಜಿನುಗಲಿಲ್ಲ. ಬೆಳಗಾಯಿತು. ಅಕ್ಕ- ಪಕ್ಕದವರು ,ಬಂಧು- ಬಳಗದ ಹಿರೀಕರು  ಸೇರಿದರು. ಎಲ್ಲಾ ಕ್ರಿಯಾಕರ್ಮ ಮುಗಿಸಿ ಸ್ವಾತಯನ್ನು ಹೊರಗೆ ಕರೆದರು. ಮುಂದಿನ ತಯಾರಿಗಾಗಿ  ಹೆಂಗಳೆಯರು ಶುರುವಿಟ್ಟುಕೊಂಡರು. ನೀರವ ಮೌನದ ನಡುವೆ ಆ ಮನೆಯ   ಹಿರಿಯಾಳು ಬೋಳು ಬೋಳಾಗಿದ್ದ ಬಾಲ ವಿಧವೆ ಮಂಜಮ್ಮ ಏರು ದನಿಯಲ್ಲಿ  ಮೊದಲ ಬಾರಿಗೆ ದನಿ ಎತ್ತಿದಳು.” ನಿಲ್ಸಿ, ಏನು ಮೊಕ ನೋಡ್ತಿವ್ರಿ; ಸ್ವಾತವ್ವ ಈ ಮನೆಗೆ ಬೆಳದಿಂಗಳ ಚಂದ್ರನಂತೆ ನಗ್ತಾ ಬಂದೋರು. ಆದ್ರೆ ಒಂದಿನ ನೆಮ್ಮದಿ ಕಾಣ್ಲಿಲ್ಲ ಅವರು. ನಮ್ ನಡುವಿನ ಸಹನೆಯ ತೇರು ಸ್ವಾತವ್ವ. ಮತ್ತೆ ಕೆಣಕ್ಬೇಡಿ ಅವರ ಸಹನೆಯ ಹಾಂ, ಅವ್ರನ್ನು ನೆಮ್ಮದಿಯಾಗಿ ಅವ್ರಿಷ್ಡದಂತೆ ಇರೋದಕ್ಕೆ ಬಿಟ್ಬಿಡಿ. ನೀವು ಒಳಗೆ ಹೋಗ್ರಿ ಸ್ವಾತವ್ವ’ ಎನ್ನುತ್ತಿದ್ದಂತೆ ಸ್ವಾತಿ ಸೆರಗು ಬಾಯಿಗೆ ಅಡ್ಡಲಾಗಿ ಹಿಡಿದು ಒಳಗೆ ನಡೆದಳು.  **********************          ‌      ‌   ‌   ‌                                                                            ‌                   

ಸಹನೆಯ ತೇರು Read Post »

You cannot copy content of this page

Scroll to Top