ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಥಾಗುಚ್ಛ

ನಾಯಿ ಮತ್ತು ಬಿಸ್ಕತ್ತು

ಕಿರು ಕಥೆ ನಾಗರಾಜ ಹರಪನಹಳ್ಳಿ ಆತ ದಂಡೆಗೆ ಬಂದು ಕುಳಿತ. ಎಲ್ಲಾ ಕಡೆ ಬಂಧನಗಳಿಂದ ಬಿಗಿದ‌ ಜಗತ್ತು ಸಾಕೆನಿಸಿತ್ತು.‌ ರಸ್ತೆಗಳೆಲ್ಲೆ ಮಕಾಡೆ ಮಲಗಿದ್ದವು. ಜನರ ಸುಳಿವಿಲ್ಲ.‌ಮುಚ್ಚಿದ  ಹೋಟೆಲ್ಲು, ಲಾಡ್ಜು, ಅಂಗಡಿ ಬಾಗಿಲು. ಗೂಡಂಗಡಿಗಳು ಬಲವಾದ ಹಗ್ಗಗಳಿಂದ ಬಂಧಿಸಲ್ಪಟ್ಟಿದ್ದವು.‌‌ ಇಡೀ ನಗರ ಸತ್ತು ಹೋಗಿತ್ತು. ಬಿಕೊ ಅನ್ನುತ್ತಿದ್ದ ಬಸ್ ಸ್ಟ್ಯಾಂಡ್. ‌ಬಿಕ್ಷುಕುರ ಸುಳಿವು ಸಹ ಇಲ್ಲ.ಮನುಷ್ಯರ ಸುಳಿವಿಲ್ಲ. ಪ್ರತಿ ಸರ್ಕಲ್ ‌ನಲ್ಲಿ ಸುರಿವ ಉರಿ ಬಿಸಿಲಲ್ಲಿ ಖಾಲಿ ರಸ್ತೆಗಳನ್ನು ಪೊಲೀಸರು ಕಾಯುತ್ತಿದ್ದರು. ಭೀತಿ ಮತ್ತು ಭಯ ಸ್ಪರ್ಧೆಗೆ ಬಿದ್ದಂತೆ ರಸ್ತೆಯ ಇಕ್ಕೆಲಗಳಲ್ಲಿ ಕುಣಿದಾಡುತ್ತಿದ್ದವು .ಜನರಿಲ್ಲದೇ ಆಸ್ಪತ್ರೆಗಳು ಸಹ ದುಃಖಿಸುತ್ತಿದ್ದವು. ಔಷಧಿ ಅಂಗಡಿ ಮಾತ್ರ ತೆರೆದು ಕೊಂಡಿದ್ದು ಕೌಂಟರ್ ನಲ್ಲಿ ಒಬ್ಬ ಪೇಪರ್ ಹಿಡಿದು ಆದ್ಹೇನೋ‌ ಜಗತ್ತು ತಲೆ ಮೇಲೆ ಬಿದ್ದಂತೆ ತದೇಕ ಧ್ಯಾನಸ್ಥನಾಗಿ ಅಕ್ಷರದತ್ತ ದೃಷ್ಟಿ ನೆಟ್ಟಿದ್ದ .‌ಇದನ್ನೆಲ್ಲಾ ಕಣ್ತುಂಬಿ‌ ಕೊಂಡ ರಾಮನಾಥ ದಂಡೆಯಲ್ಲಿ ಧ್ಯಾನಿಸುತ್ತಿದ್ದ. ಆಗ ತಾನೇ ಕೋವಿಡ್ ಲ್ಯಾಬ್ ನಲ್ಲಿ ಅ ದಿನ ಬಂದ ಐವತ್ತು ಜನರ ಗಂಟ ದ್ರವ ಪರೀಕ್ಷೆ ಮಾಡಿ, ಜೀವವನ್ನು ಕೈಯಲ್ಲಿ ಹಿಡಿದು ಬಂದಿದ್ದ.‌ ಅಂದು ಬಂದ ಐವತ್ತು ಸಂಶಯಿತ ಕರೋನಾ ಗಂಟಲು ದ್ರವದಲ್ಲಿ ಹದಿನೆಂಟು ಜನರ ಗಂಟಲು ದ್ರವದಲ್ಲಿ ಕೋವಿಡ್ ೧೯ ವೈರಸ್ ಇರುವುದು ದೃಢಪಟ್ಟಿತ್ತು.‌ ತನ್ನ ಜೀವಮಾನದಲ್ಲಿ ಮನುಷ್ಯರು, ವೈದ್ಯರು, ಅಧಿಕಾರಿಗಳು…. ಎಲ್ಲರೂ ಗಡಿಬಿಡಿ , ಒಂಥರಾ ಅವ್ಯಕ್ತಭಯದಲ್ಲಿ ಇದ್ದುದ ರಾಮನಾಥ ಮೊಟ್ಟ ಮೊದಲ ಬಾರಿಗೆ ನೋಡಿದ್ದ.‌ತನ್ನ ಕೆಲಸವನ್ನು ನಿರ್ಲಿಪ್ತತೆಯಿಂದ‌ ಮುಗಿಸಿ ಬಂದಿದ್ದ ಆತ ಜೀವನದ ನಿರರ್ಥಕ ‌ಕ್ಷಣಗಳಿಗೆ ಸಾಕ್ಷಿಯಾಗಿದ್ದೇನೋ ಅಥವಾ ವರ್ತಮಾನ ಕುಸಿಯುವುದನ್ನು ಕಣ್ಣಲ್ಲಿ ತುಂಬಿಕೊಳ್ಳುತ್ತಿದ್ದೇನೋ ಎಂದು ತರ್ಕಿಸುತ್ತಾ ಕುಳಿತಿದ್ದ. ಇದ್ದಕ್ಕಿದ್ದಂತೆ ಓರ್ವ ವ್ಯಕ್ತಿ ದುತ್ತನೇ ಎದುರಾಗಿ ಮಾತಿಗಿಳಿದ.‌ “ಏನ್ ಸರ್ ಸರ್ಕಾರ ಮಾಡಿದ್ದು ಸರಿಯಾ? ನಾ ಕುಡಿಯದೇ ಬದುಕಲಾರೆ.‌ ಲಿಕ್ಕರ್ ಶಾಪ್ ಮುಚ್ವಿದ್ದು ಸರಿಯೇ” ಎಂದು ಪ್ರಶ್ನಿಸಿದ.‌ ರಾಮನಾಥಗೆ  ಕಸಿವಿಸಿಯಾಯ್ತು.‌ಬಗೆಹರಿಸಲಾಗದ ಇವನ ಪ್ರಶ್ನೆಗೆ ಉತ್ತರ ಎಲ್ಲಿಂದ ತರುವುದು ಎಂದು? ಸರಿಯಲ್ಲ ಎಂದು ತಲೆ ಅಲ್ಲಾಡಿಸಿ ಮತ್ತೆ ನಿರ್ಲಿಪ್ತನಾದ.‌ ಹಠಾತ್ ಎದುರಾದ ವ್ಯಕ್ತಿ ಅಲ್ಲಿಂದ ನಡೆದು‌‌ಹೋದ.‌ಅವನನ್ನು‌ ನಾಯಿಯೊಂದು ಹಿಂಬಾಲಿಸಿತು.‌ ಮನ ತಣಿಯುವಷ್ಟು ದಂಡೆಯಲ್ಲಿ ಕುಳಿತ ರಾಮನಾಥ ಎದ್ದು ಮನೆ ಕಡೆ ನಡೆದ . ಅವನು ಒಬ್ಬಂಟಿ ಬೇರೆ. ಸಾಂಬರು ಕಟ್ಟಿಸಿಕೊಳ್ಳಲು‌ ಹೋಟೆಲ್ ‌ಗಳು  ಬೇರೆ ಬಂದ್ ಆಗಿವೆ.‌ ಅನ್ನ ಸಾರು ಅವನೇ ಬೇಯಿಸಿ ತಿನ್ನುವುದು ರೂಢಿಯಾಗಿತ್ತು ಲಾಕ್ ಡೌನ್ ಸಮಯದಲ್ಲಿ.‌ಮೊದಲಾದರೆ ಅನ್ನ ಮಾತ್ರ ಬೇಯಿಸಿಕೊಳ್ಳುತ್ತಿದ್ದ. ಇದೇ ಧಾವಂತದಲ್ಲಿ ಹೆಜ್ಜೆ ಹಾಕಿದವನಿಗೆ ದಾರಿಯಲ್ಲಿ ಹಠಾತ್ತನೇ ದಂಡೆಯಲ್ಲಿ ಪ್ರಶ್ನೆ ಎಸೆದ ವ್ಯಕ್ತಿ ಸಿಕ್ಕ. ಆತ ರಸ್ತೆ ಪಕ್ಕ ನಾಯಿಯೊಂದಿಗೆ ಮಾತಾಡುತ್ತಿದ್ದ. ಅದನ್ನೆ  ತನ್ನ ಜೀವದ ಭಾಗವೆಂಬಂತೆ ಅದಕ್ಕೆ ಬಿಸ್ಕತ್ತು ಹಾಕುತ್ತಾ …ತನ್ನ ದುಃಖವನ್ನೆಲ್ಲಾ  ನಾಯಿಯ ಕಣ್ಣಿಗೆ ವರ್ಗಾಯಿಸುತ್ತಾ ಅದ್ಹೇನೋ ಅದಕ್ಕೆ ಅರ್ಥವಾಗುವ ಭಾಷೆಯಲ್ಲಿ ಹೇಳುತ್ತಿದ್ದ. ಪ್ರತಿ ಮಾತಿಗೂ ಒಂದೊಂದೇ ಬಿಸ್ಕತ್ತಿನ‌ ತುಂಡುಗಳನ್ನು ಅದಕ್ಕೆ ಹಾಕುತ್ತಿದ್ದ.‌ ಮರದ ಕೆಳಗೆ ಈ‌ ಸಂಭಾಷಣೆ ನಡೆದಿತ್ತು. ಕುತೂಹಲದಿಂದ ರಾಮನಾಥ ಇದನ್ನು ಆಲಿಸತೊಡಗಿದ. ಲಿಕ್ಕರ್ ಹುಡುಕಿ ಹೊರಟ ಆ ಸಾಮಾನ್ಯ ಮೊದಲ ನೋಟಕ್ಕೆ ಕುಡುಕ ಅನ್ನಿಸಿದ್ದ. ಈಚೀಚೆಗೆ ಕೆಲಸವೂ ಇಲ್ಲದೇ, ಉಳಿಯಲು ಸೂರು ಇಲ್ಲದೇ ಅಂದಂದೆ ದುಡಿಯುವವರ  ಆಹಾರಕ್ಕೆ ಅಲೆದ‌ ಈ ಸತ್ತ ನಗರದಲ್ಲಿ‌ ;   ನಾಯಿ‌ ಹಸಿವಿಗೂ ಮಿಡಿವ, ಮನುಷ್ಯನ ಕಂಡು ಮನಸಲ್ಲೇ ಸಮಾಧಾನಿಯಾದ. ಅಷ್ಟರಲ್ಲಿ ಹಸಿದವರಿಗೆ ಊಟದ ಜೀಪ್ ನಲ್ಲಿ ಅನ್ನ ಸಾರು ತುಂಬಿದ ಪಾತ್ರೆ ಇಟ್ಟುಕೊಂಡು  ಹಸಿದವರಿಗೆ‌ ಹುಡುಕುವ  ಮದರ್  ಥೆರೇಸಾ ಟ್ರಸ್ಟನ ಸ್ಯಾಮಸನ್  ಎದುರಾದರು. ರಾಮನಾಥನನ್ನ ಕಂಡವರೇ   ಕೈ ಬೀಸಿದರು. ಅತ್ತ ನಾಯಿ‌ ಮತ್ತು ಕುಡುಕ ಮನುಷ್ಯ  , ಸ್ಯಾಮಸನರ  ಅನ್ನ ನೀಡುವ  ಜೀಪ್ ಬಂದ ದಿಕ್ಕಿ ನತ್ತ ಹೆಜ್ಜೆ ಹಾಕಿದರು. ಅದೇ‌ ಬೀದಿಯ ಪಿಡಬ್ಲುಡಿ ಕ್ವಾಟರ್ಸನಲ್ಲಿ ಕೊನೆಯ ಮೂಲೆಯ ಮನೆಯಲ್ಲಿದ್ದ ‌ಮೇರಿ  ಥಾಮಸ್  ಎಂಬ ಚೆಲುವೆ  ಬಾಗಿಲ  ಮರೆಯಲ್ಲಿ ನಿಂತು, ಎಂದಿನಂತೆ ರಾಮನಾಥನ ಕಂಡು ತಣ್ಣಗೆ ಮುಗುಳ್ನಕ್ಕಳು….. *****  

ನಾಯಿ ಮತ್ತು ಬಿಸ್ಕತ್ತು Read Post »

ಇತರೆ

ಕಾಫೀನೊ -ಚಹಾನೊ

ಚರ್ಚೆ ರಾಮಸ್ವಾಮಿ ಡಿ.ಎಸ್. ಕಾಫಿ ಮೇಲೋ ಚಹಾ ಮೇಲೋ ಎಂದು ಕುಸ್ತಿ ಆಡುತ್ತಿರುವವರ ಫೇಸ್ಬುಕ್ ಪೇಜುಗಳನ್ನು ಬ್ರೌಸ್ ಮಾಡುತ್ತ ಇರುವಾಗ ಗಂಡು ಹೆಚ್ಚೋ ಹೆಣ್ಣು ಹೆಚ್ಚೋ ಎಂಬ ಹೈಸ್ಕೂಲ್ ದಿನಗಳ ಡಿಬೆಟ್ ವಿಷಯಗಳೇ ನೆನಪಾದುವು. ಕಾಫಿ, ಚಹಾ, ಹೆಣ್ಣು, ಗಂಡು, ಸಾಹುಕಾರಿಕೆ, ಬಡತನ, ಜಾತಿ, ಧರ್ಮ ಅಂತೆಲ್ಲ ನಾವು ಗುದ್ದಾಟ ಮಾಡಿದರೂ ಯಾರಿಗೆ ಯಾವುದು ಮುಖ್ಯ ಅನ್ನಿಸುತ್ತದೋ ಅದನ್ನು ಅವರವರು ಅನುಸರಿಸುತ್ತಾರೆ. ಯಾರೋ ಹೇಳಿದರೆಂದು ಕಾಫಿ ಟೀ ಬಿಟ್ಟು ಈಗ ಎಲ್ಲರ ಮನೆಯಲ್ಲೂ ಅಮೃತ ಬಳ್ಳಿ ಕಷಾಯ ಕುಡೀತಿರೋದನ್ನು ಇವರ್ಯಾರೂ ಹೇಳಲೇ ಇಲ್ಲವಲ್ಲ… Jogi Girish Rao Hatwar ಮತ್ತು Sumithra Lc ಅವರ ಬರಹಗಳನ್ನು ಮತ್ತು ಅವರಿಬ್ಬರೂ ಕಾಫಿಯ ಪರವಾಗಿ ನಡೆಸಿದ ಡಿಬೇಟುಗಳನ್ನೂ ಕಂಡು ಖುಷಿಯಾಗಿ ನನ್ನ ಬರಹವನ್ನೂ ಇಲ್ಲಿ ಸೇರಿಸುತ್ತ ಇದ್ದೇನೆ. ಚಹಾ ಕುಡಿಯೋ ಅಭ್ಯಾಸ ಇರುವವರು ಕಾಫಿಯನ್ನು , ಕಾಫಿಯಷ್ಟೇ ಅಮೃತ ಎಂದು ನಂಬಿದವರು ಟೀಯನ್ನು ದ್ವೇಷಿಸುತ್ತಾರೆ. ಆದರೆ ಇವೆರಡೂ ಒಳ್ಳೆಯದು ಅಲ್ಲವೇ ಅಲ್ಲ ಅಂತ ತಿಳಿದ ಮಲೆನಾಡಿನವರು ಇವತ್ತಿಗೂ ಬೆಳಿಗ್ಗೆ ಮೊದಲು ಕುಡಿಯುವುದು ಕಷಾಯವನ್ನೇ…ಶುಂಠಿ, ಮೆಣಸು, ಬೆಲ್ಲ, ಜೀರಿಗೆ, ದ‌ನಿಯ ಪುಡಿಯನ್ನು ಬೆಲ್ಲದ ನೀರಿನ ಅರ್ಧಾಂಶಕ್ಕೆ ಕುದಿಸಿ ಕೊಂಚ ಹಾಲು ಸೇರಿಸಿ ಕುಡಿಯುವುದು ಉತ್ತಮ ಆರೋಗ್ಯಕ್ಕೂ ಒಳ್ಳೆಯದು ಎಂಬುದು ಕರೋನಾ ಕಾಲದ ಸತ್ಯ … ಈ ಟೀ ಮಾಡುವುದು ಕೂಡ ಕಷಾಯ ಮಾಡಿದಂತೆಯೇ. ಟಿ ಪುಡಿಯನ್ನು ನೀರು + ಹಾಲಿನ ಜೊತೆ ಕುದಿಸಿ ಕುದಿಸಿ ಸೋಸುವ ಮೊದಲು ಪರಿಮಳಕ್ಕೆ ಶುಂಠಿಯನ್ನು ಕೂಡ ಸೇರಿಸಿ ಶೋಧಿಸಿ ಕುಡಿಯುತ್ತಾರೆ. ಒಪ್ಪಿ ಬಿಡಿ ಯಾವತ್ತೂ ಟೀ ಪಿತ್ತ ಹೆಚ್ಚಿಸುವಂಥದೇ. ಬಹಳ ಟೀ ಕುಡಿಯವರಿಗೆ ಆರೋಗ್ಯ ಇರೋಲ್ಲ ಹೌದೋ ಅಲ್ಲವೋ ನೀವೇ ಹೇಳಿ‌. ಅಷ್ಟಕ್ಕೂ ಟೀ ಮಾಡೋದು ಬ್ರಹ್ಮ ವಿದ್ಯೆ ಏನಲ್ಲ. ಹಾಲು ಮತ್ತು ಟೀ ಪುಡಿ ಚನ್ನಾಗಿದ್ದರೆ ಕುದಿಸಲಿಕ್ಕೆ ದೊಡ್ಡ ಪಾತ್ರೆ ಇದ್ದರೆ ಸಾಕಾದೀತು. ಆದರೆ ಕುದಿಯುವಾಗ ಅದು ಉಕ್ಕಿ ಸೊಕ್ಕಿ ಸ್ಟೋವನ್ನು ಆರಿಸಬಾರದು ಅಷ್ಟೆ. ಆದರೆ ಕಾಫಿ ಮಾಡೋದು ಎಲ್ಲರಿಂದಲೂ ಆಗೋಲ್ಲ. ಹಾಗಾಗಿ ಎಲ್ಲರೂ ಒಳ್ಳೆಯ ಕಾಫಿ ಕುಡಿಯದೇ ಇರೋದರಿಂದ ಒಳ್ಳೆಯ ಕಾಫಿಯ ರುಚಿ ಮತ್ತು ಸ್ವಾದ ಗೊತ್ತಿರದೇ ಟೀ ಚಂದ ಅನ್ನುತ್ತಾರೆ. ಜೊತೆಗೆ ಟೀ ಎಷ್ಟು ಕುದಿಯುತ್ತೋ ಅಷ್ಟು ರುಚಿ. ಆದರೆ ಕಾಫಿ ಯಾವತ್ತೂ ಕುದಿಯಲೇ ಬಾರದು. ಒಮ್ಮೆ ಕುದಿಯಿತೋ ಅದರ ರುಚಿ ಮತ್ತು ಬಣ್ಣ ಎರಡೂ ಕೆಡುತ್ತವೆ. ಟೀ ಮಾಡಲು ಹಾಲಿನ ಗುಣಮಟ್ಟ ಅಥವ ಟೀ ಪುಡಿಯ ಗುಣ ಮುಖ್ಯ ಆಗುವುದಿಲ್ಲ. ಯಾವುದೇ ಗುಣಮಟ್ಟದ ಹಾಲಲ್ಲೂ ಯಾವುದೇ ಕಂಪನಿಯ ಟೀ ಪುಡಿ ಹಾಕಿ ಕುದಿಸಿ ಮೇಲಷ್ಟು ಏಲಕ್ಕಿಯನ್ನೋ ಶುಂಠಿಯನ್ನೋ ಸೇರಿಸಿದರೆ ಟೀ ಸಿದ್ಧವಾದೀತು. ಆದರೆ ಕಾಫಿ ಮಾಡುವುದು ಅತ್ಯಂತ ಶ್ರದ್ಧೆ ಮತ್ತು ತೀವ್ರ ತಾಳ್ಮೆ ಇರದೇ ಇದ್ದರೆ ಆಗುವುದೇ ಇಲ್ಲ. ಜೊತೆಗೆ ಒಳ್ಳೆಯ ಕಾಫಿ ಪುಡಿ ಮತ್ತು ಹೊಸ ಗುಣ ಮಟ್ಟದ ಹಾಲು ಇಲ್ಲದೇ ಕಾಫಿ ಮಾಡಲಾಗುವುದಿಲ್ಲ. ನಿಮ್ಮಲ್ಲಿ ಬಹಳಷ್ಟು ಟೀ ಪ್ರಿಯರು ಕಾಕ ಹೋಟೆಲ್ಲಿನ ಟೀ ಇಷ್ಟ ಪಟ್ಟು ಕುಡಿಯುತ್ತೀರಿ. ಟೀ ಯಾವುದೇ ಗುಡಿಸಲು ಹೋಟೆಲ್ಲಿನಲ್ಲಿ ಸ್ಟಾರ್ ಹೋಟೆಲ್ಲಿನಲ್ಲಿ ಸಿಗುತ್ತೆ. ಆದರೆ ಒಳ್ಳೆಯ ಕಾಫಿ ಸಿಗುವುದು ಅದನ್ನು ಕುಡಿದು ಗೊತ್ತಿರುವರಿಗಷ್ಟೇ ಗೊತ್ತಿರುವ ಸತ್ಯ. ಜೊತೆಗೆ ಇತ್ತೀಚೆಗೆ ಟೀ ಪುಡಿಯನ್ನೇ ಉಪಯೋಗಿಸದೇ ಮಾಡುವ ವಿವಿಧ ರೀತಿಯ ಟೀಗಳು ಮಾರ್ಕಟ್ಟಲ್ಲಿ ಇರೋದು ಕೂಡ ಪಾಪ ಆ ಟೀ ಪುಡಿಗೆ ಮಾಡಿದ ಅವಮಾನವೇ!! ಗುಲಾಬಿ ಹೂವ ಪಕಳೆಯಲ್ಲಿ, ಹಾಲನ್ನೇ ಹಾಕದ ಲೆಮನ್ ಟೀನಲ್ಲಿ, ಅದೇನು ಖುಷಿ ಇದೆಯೋ ಆ ಟೀ ಪ್ರಿಯರೆ ಹೇಳಬೇಕು. ಕಾಫಿ ಯಾವತ್ತೂ ಉಪಮೆ ಮತ್ತು ಪ್ರತಿಮೆ ತುಂಬಿದ ಕಾವ್ಯದಂತೆ. ಅದನ್ನು ಬರೆಯುವುದೂ ಕಷ್ಟ, ಓದಿ ಅರ್ಥ ಮಾಡಿಕೊಳ್ಳೋದೂ ಕಷ್ಟ. ಆದರೆ ಒಮ್ಮೆ ರುಚಿ ಹತ್ತಿತು ಅಂದರೆ ಕಾವ್ಯ ಹೇಗೆ ಕಾಡುತ್ತದೋ ಹಾಗೆ ಕಾಫಿ ಕೂಡ. ರೋಬೋಸ್ಟಾ ಅರೇಬಿಕಾ ಇತ್ಯಾದಿ ಪ್ರಬೇಧ ಏನೇ ಇರಲಿ ಅದರ ಜೊತೆ ಬೆರಸುವ ಚಿಕೋರಿ ಇಲ್ಲದ ಕಾಫಿ ಕಾಫಿಯೇ ಅಲ್ಲ. ಈ ಚಿಕೋರಿ ಅನ್ನೋದು ಕಾವ್ಯ ಪ್ರಿಯರ ಚಕೋರ ಮತ್ತು ಚಂದ್ರಮರ ಹಾಗೆ, ಕಾಫಿ ಮತ್ತು ಚಿಕೋರಿಗಳು. ಒಂದಿಲ್ಲದ ಮತ್ತೊಂದು ಶೋಭಿಸಲಾರದು. ಅದೂ ಹದವರಿತ ದಾಂಪತ್ಯ ಇರಬೇಕು. ೮೦ ಕಾಫಿ ೨೦ ಚಕೋರಿ ಒಕೆ. ೭೦:೩೦ ಆದರೂ ಪರವಾಯಿಲ್ಲ. ಅದೇನಾದರೂ ೬೦:೪೦ ಅಥವ ೫೦:೫೦ ಆಯಿತೋ ಕಾಫಿ ಕಹಿ ಕಾರ್ಕೋಟಕ ವಿಷವಾಗಿ ಬದಲಾಗುತ್ತೆ. ಚಕೋರಿ ಬೇಡವೇ ಬೇಡ ಅಂದರೆ ಡಿಕಾಕ್ಷನ್ನು ಗಟ್ಟಿಯಾಗದೇ ಕಾಫಿ ಕಳೆಗಟ್ಟುವುದೇ ಇಲ್ಲ. ಕಾಫಿ ಕಾಸುವುದಲ್ಲ, ಅದು ಬೆರಸುವುದು ಮಾತ್ರ. ಹದವಾಗಿ ಕಾಯಿಸಿದ ಗಟ್ಟಿಹಾಲಿಗೆ ಗಟ್ಟಿ ಡಿಕಾಕ್ಷನ್ ಬೆರೆಸಿದರೆ ಅಮೃತವೇ ಸಿದ್ಧ ಆಗುತ್ತದೆ. ಟೀ ಕುದಿಸಿದ ಹಾಗೆ ಕಾಫಿ ಪುಡಿ ಹಾಲು ಸಕ್ಕರೆ ಕುದಿಸಿದರೆ ಯಾವತ್ತೂ ಕಾಫಿ ಆಗುವುದಿಲ್ಲ ಮತ್ತು ಹಾಗೆ ಮಾಡಿದ ಕಾಫಿ ಯಾರೋ ಒಬ್ಬ ಪಾಪಿಯ ಫಸಲು ಅಷ್ಟೆ.. ಕಾಫಿ ತಯಾರಿಕೆಯ ಹದ ಮತ್ತು ಸಮಯ ಬಹು ಮುಖ್ಯ. ಯಾವತ್ತೂ ಹಳೆಯ ಕಾಫಿಯನ್ನು ಬಿಸಿ ಮಾಡಿ ಟೀ ತರಹ ಕುಡಿಯಲು ಆಗುವುದಿಲ್ಲ. ಅದರದೇನಿದ್ದರೂ ಯಾವತ್ತೂ ಫ್ರೆಷ್ & ಪ್ಯಾಷನ್… ನೀರು ಕುದಿಸಿ ಕಾಫಿ ಪುಡಿ ತುಂಬಿದ್ದ ಫಿಲ್ಟರಿಗೆ ಹಾಕುವುದು ಹಳೆಯ ಕ್ರಮ. ಫಿಲ್ಟರಿನ ಮೇಲಂತಸ್ತಿನಿಂದ ಕೆಳಗಿನ ಸ್ಟೋರ್ ರೂಮಿಗೆ ಬಿದ್ದ ಡಿಕಾಕ್ಷನ್ನಿಗೆ ಬೇಕಾದಾಗ ಹಾಲು ಬಿಸಿ ಮಾಡಿ ಬೆರಸುವುದು ಕಾಫಿ ತಯಾರಿಕೆಯ ಆರಂಭದ ಹಂತ. ಯಾವಾಗ ನಮಗೆ ಸಲಕರಣೆ ಮತ್ತು ಸೌಕರ್ಯಗಳು ಬೇಕಾದವೋ ಆಗ ತಯಾರು ಮಾಡಿದ್ದು ಕಾಫಿ ಮೇಕರ್ ಎಂಬ ಎಲೆಕ್ಟ್ರಿಕ್ ಮಷೀನು. ‌ನೀರನ್ನು ಒಲೆಯ ಮೇಲಿಟ್ಟು ಕುದಿಸಿ ಅದನ್ನು ಇಕ್ಕಳ ಹಿಡಿದು ಫಿಲ್ಟರಿಗೆ ಸುರಿಯುವ ಶ್ರಮ ಮತ್ತು ಹೆದರಿಕೆ ಕಳೆದದ್ದೇ ಈ ಕಾಫಿ ಮೇಕರು‌. ಅರ್ಧ ಲೀಟರು ನೀರು ತುಂಬಿ ಪಕ್ಕದ ಜಾಡಿಗೆ ನಾಲ್ಕು ಚಮಚ ಕಾಫಿ ಪುಡಿ ಸುರಿದು ಸ್ವಿಚ್ ಒತ್ತಿದರೆ ಹತ್ತು ನಿಮಿಷದಲ್ಲಿ ಜಾಡಿಯ ತುಂಬ ಗಟ್ಟಿ ಡಿಕಾಕ್ಷನ್ ಸಿದ್ಧ!! ಪ್ರಿಯಾ, ಪ್ರೆಸ್ಟೀಜ್, ಜಾನ್ಸನ್ ಎಷ್ಟೊಂದು ಕಂಪನಿಗಳ ಅತ್ಯಾಕರ್ಷಕ ಕಾಫಿ ಮೇಕರು ಇದ್ದಾವೆ ಅಂದರೆ ಅದನ್ನು ಅಮೆಜಾನಲ್ಲಿ ಫ್ಲಿಪ್ ಕಾರ್ಟಲ್ಲಿ ನೋಡೇ ತಣಿಯಬೇಕು… ಇನ್ನು ಕಾಫಿಯ ಸ್ಪೆಷಲ್ ಸಂಚಿಕೆ ಬೇಕಾದವರು ಕಾಫಿ ತಯಾರಿಕೆಗೆ ಬಳಸುವುದು ಪರ್ಕ್ಯುಲೇಟರನ್ನು. ಅದನ್ನು ಉರಿವ ಬೆಂಕಿಯ ಮೇಲಾಗಲೀ ಅಥವ ಎಲೆಕ್ಟ್ರಿಕ್ ಮೂಲಕ ಕೂಡ ಆಗಿಸುವ ವಿಧಾನಗಳು ಈಗ ಚಾಲ್ತಿ ಇದೆ. ಕಾಫಿ ನಿಯಂತ್ರಣ ಮಾರುಕಟ್ಟೆ ಇದ್ದಾಗ “ಕಾಫಿ ಬೋರ್ಡ್” ಎಂಬ ಸಂಸ್ಥೆ ತಯಾರಿಸಿ ಕೊಟ್ಟಿದ್ದ ಪರ್ಕ್ಯುಲೇಟರ್ ಅದೆಷ್ಟು ಚನ್ನಾಗಿ ಡಿಕಾಕ್ಷನ್ ಇಳಿಸುತ್ತೆ ಎಂದರೆ ಅದನ್ನು ಇನ್ನೂ ನಾನು ಇವತ್ತಿಗೂ ಬಳಸುತ್ತಿದ್ದೇನೆ‌. ಕೆಫೆ ಕಾಫಿ ಡೇ ಕೂಡ ₹೫೦೦/ರ ಆಸುಪಾಸಲ್ಲಿ ಸಣ್ಣ ಪರ್ಕ್ಯುಲೇಟರ್ ಮಾರುತ್ತೆ. ಅದು ಕೂಡ ಚನ್ನಾಗೇ ಇದೆ. ಫಿಲ್ಟರು, ಮೇಕರು, ಪರ್ಕ್ಯುಲೇಟರು ಇಲ್ಲದೇ ಕುದಿಕುದಿವ ನೀರಿಗೆ ಕಾಫಿ ಪುಡಿ ಹಾಕಿ, ಮುಚ್ಚಿಟ್ಟು ಐದು ನಿಮಿಷ ಬಿಟ್ಟು ಕೋರಾ ಬಟ್ಟೆಯಲ್ಲಿ ಸೋಸಿ ತಯಾರಿಸಿದ ಡಿಕಾಕ್ಷನ್ ಕೂಡ ತಕ್ಷಣಕ್ಕೆ ಕುಡಿಯಲು ಅಡ್ಡಿ ಇಲ್ಲ. ಫಿಲ್ಟರು ಮತ್ತು ಮೇಕರುಗಳ ಡಿಕಾಕ್ಷನ್ ಅವತ್ತವತ್ತೇ ಖಾಲಿ ಮಾಡಬೇಕು‌‌. ತಂಗಳಾದರೆ ಕಾಫಿಯ ರುಚಿ ಮತ್ತು ಘಮ ಎರಡೂ ಕೆಡುತ್ತವೆ. ಆದರೆ ಪರ್ಕ್ಯುಲೇಟರಿನ ಡಿಕಾಕ್ಷನ್ ಯಾವತ್ತಿಗೂ ಸ್ಟಾರ್ ಹೋಟೆಲ್ಲಿನ ಅಂದ ಇದ್ದ ಹಾಗೆ. ಅದು ಕೆಲವರಿಂದಷ್ಟೇ ಆಗುವ ಕೆಲಸ. ಕೆಳಹಂತದಲ್ಲಿ ನೀರು ಕುದಿದು ಆವಿಯಷ್ಟೇ ಮೇಲಂತಸ್ತಿನ ಪುಡಿಯನ್ನು ಮುಟ್ಟಿ ತೊಟ್ಟು ತೊಟ್ಟೇ ಡಿಕಾಕ್ಷನ್ ಇಳಿಯುವಾಗ ಹುಟ್ಟುವ ಘಮ ಇದೆಯಲ್ಲ ಅದೇ ಸಾಕು ಆ ಹೊತ್ತಿನ ಹಸಿವು ಮತ್ತು ಆಯಾಸವನ್ನು ಪರಿಹರಿಸಲು. ಕಾಫಿಯ ರುಚಿ ಸ್ವಾದ ಮತ್ತು ಗುಣ ಗೊತ್ತುರುವವರು ಗೆಳೆಯ Katte Gururaj ಥರ ಗ್ರಹಿಸಬಲ್ಲರು ಮತ್ತು ಜೊತೆಗಿರುವವರನ್ನೂ ತಣಿಸಬಲ್ಲರು… **********************************

ಕಾಫೀನೊ -ಚಹಾನೊ Read Post »

ಅಂಕಣ ಸಂಗಾತಿ, ರಹಮತ್ ತರೀಕೆರೆ ಬರೆಯುತ್ತಾರೆ

ಪೇಟಿಮಾಂತ್ರಿಕ ಬೆಳಗಾವಿಯಲ್ಲಿರುವ ಪಂಡಿತ್ ರಾಮಭಾವು ಬಿಜಾಪುರೆ ಅವರನ್ನು ಕಾಣಬೇಕೆಂದು ನನಗೆ ಅನಿಸಿತು. ಮಿತ್ರರಾದ ಕುಸಗಲ್ಲರಿಗೆ ವಿಷಯ ತಿಳಿಸಲು `ನಾವು ಇದೇ ಊರಾಗಿದ್ರೂ ಅವರ ಮನೀಗ್ ಹೋಗಿಲ್ಲ, ಬರ್ರಿ ಸರ’ ಎಂದು ಕರೆದೊಯ್ಯಲು ಒಪ್ಪಿದರು. ಮುಸ್ಸಂಜೆ ಹೊತ್ತಿಗೆ ಶ್ರೀ ಕುಸುಗಲ್ಲ, ಅವರ ಮಗಳು ಕವಿತಾ, ಸ್ನೇಹಿತ ಡಾ. ಕೋಲ್ಕಾರ ಅವರೊಡನೆ ಬಿಜಾಪುರೆ ಅವರಲ್ಲಿಗೆ ಹೊರಟೆ. ಹಳೇ ಬೆಳಗಾವಿಯ ಬೀದಿಗಳು. ಪಶ್ಚಿಮಘಟ್ಟದ ಜಿರ್ರೋ ಮಳೆಧಾರೆ. ಕಚಿಪಿಚಿ ಕೆಸರು. ಹಸುರು ಕಕ್ಕುವ ಗಿಡಮರಪೊದೆ. ಮನೆಯ ಛಾವಣಿ ಕಾಂಪೌಂಡು ಗೋಡೆಗಳು ಹಸಿರು ಸ್ವೆಟರುಟ್ಟಂತೆ ಬೆಳೆದ ಹಾವಸೆ. ಮಬ್ಬುಕವಿದ ಬೂದಿಬಡುಕ ಆಗಸದಲ್ಲಿ ಶಿವಸೇನೆಯ ಮಾರುದ್ದದ ಭಗವಾಧ್ವಜಗಳ ಪಟಪಟ-ಇತ್ಯಾದಿ ಕಣ್ಣೊಳಗೆ ತುಂಬಿಕೊಳ್ಳುತ್ತಿರಲು ಮನೆ ಮುಟ್ಟಿದೆವು.  ಸಾಧಾರಣ ಮನೆ. ಬಾಗಿಲು ತೆರೆದವರು ಹಣ್ಣುಹಣ್ಣಾದ ಮುದುಕಿ. ಅದು ‘ಕಷಾ ಸಾಠಿ ಆಲ?’ (ಏನು ಬಂದಿರಿ?) ಎಂದು ಹಣೆಸುಕ್ಕು ಮಾಡಿಕೊಂಡು ಪ್ರಶ್ನೆ ಒಗೆಯಿತು. ‘ಬಿಜಾಪುರೆ ಮಾಸ್ತರನ್ನು ಕಾಣಬೇಕಿತ್ತು’ ಎನ್ನಲು ‘ಹಂಗೇನ್ರಿ. ಬರ್ರಿ, ಒಳಗ ಬರ್ರಿ. ಕುಂದರ್ರಿ. ಮ್ಯಾಲ ಹುಡ್ರುಗೆ ಅಭ್ಯಾಸ ಮಾಡಿಸಲಿಕ್ಕೆ ಹತ್ಯಾರ’ ಎಂದು ಬರಮಾಡಿಕೊಂಡರು. ‘ತಾವು ಬಿಜಾಪುರೆಯವರಿಗೆ..?’ ಎನ್ನಲು ‘ಕಿರೀ ಮಗಳ್ರೀ’ ಎಂದು ಜವಾಬು ಸಿಕ್ಕಿತು. ಮಗಳೇ ಇಷ್ಟು ಹಣ್ಣಾಗಿರಬೇಕಾದರೆ, ಅಪ್ಪ ಇನ್ನೆಷ್ಟು ಕಳಿತಿರಬೇಕು ಎಂದುಕೊಂಡು ಕುಳಿತೆವು. ಹತ್ತು ಮಿನಿಟು ಮುಗಿದಿರಬೇಕು. ‘ಪಾಠ ಮುಗಿದಿದೆ, ಅತಿಥಿಗಳು ಮೇಲೆ ಹೋಗಬಹುದು’ ಎಂದು ಸಂದೇಶ ಬಂತು. ಕರೆಂಟು ಹೋಗಿ ಕತ್ತಲಾಗುತ್ತಿತ್ತು. ಪಾಚಿಹಿಡಿದ ಪಾವಟಿಗೆಗಳನ್ನು ಹುಶಾರಾಗಿ ಹತ್ತಿ ಮೇಲೆ ಹೋದೆವು.ಸಣ್ಣದೊಂದು ಖೋಲಿಯಲ್ಲಿ ಗ್ಯಾಸ್‍ಬತ್ತಿಯ ಬೆಳಕಲ್ಲಿ ಬಿಜಾಪುರೆ ಲೋಡುತೆಕ್ಕೆಗೆ ಒರಗಿದ್ದರು. ಇಬ್ಬರು ಶಿಷ್ಯರು-ಅತಿಥಿ ಸತ್ಕಾರದಲ್ಲಿ ನೆರವಾಗಲೆಂದೊ ಏನೊ-ಅಲ್ಲೇ ಗೋಡೆಗೊರಗಿ ಕುತೂಹಲದ ದಿಟ್ಟಿತೊಟ್ಟು ನಿಂತಿದ್ದರು. ಅವರು ಗುರುಗಳಿಗೆ ಕೋಟು ತೊಡಿಸಲು ನೆರವಾಗಿರಬೇಕು. ತಿಳಿಯಾಗಸ ಬಣ್ಣದ ಕೋಟಿನ ಗುಂಡಿಗಳನ್ನು ಬಿಜಾಪುರೆ ಆಗಷ್ಟೆ ಹಾಕಿಕೊಳ್ಳುತ್ತಿದ್ದರು. ಆ ಕೋಟಿನಲ್ಲಿ ಲಕ್ಷಣವಾಗಿ ಕಾಣುತ್ತಿದ್ದರು. ಆರಡಿ ಎತ್ತರದ, ತಲೆಕೆಳಗಾಗಿ ಹಿಡಿದ ತಂಬೂರಿಯಂತಿದ್ದ ನೆಟ್ಟನೆ ಕಾಯದ ಬಿಜಾಪುರೆ, ವಯೋಸಹಜ ಸೊರಗಿದ್ದರು. ಗಾಂಧಿಕಿವಿ. ವಿಶಾಲ ಹಣೆ. ಕರೀಟೊಪ್ಪಿಗೆ. ಹೊಳೆವ ಕಣ್ಣು. ಪೇಟಿ ಮನೆಗಳ ಮೇಲೆ ಆಡಲೆಂದೇ ಮಾಡಿದಂತಿರುವ ನೀಳ್‍ಬೆರಳು. ಎದುರುಗಡೆ ಅರ್ಧ ಕತ್ತರಿಸಿಟ್ಟ ಕುಂಬಳಕಾಯಿಯ ಹೊಳಕೆಗಳಂತೆ ವಿಶ್ರಾಂತ ಸ್ಥಿತಿಯಲ್ಲಿರುವ ತಬಲಗಳು. ಬಗಲಿಗೆ ಹಾರ್ಮೊನಿಯಂ.  ಬಿಜಾಪುರೆ ಭಾರತದ ಬಹುತೇಕ ಹಿಂದೂಸ್ಥಾನಿ ಗಾಯಕರಿಗೆ ಸಾಥಿದಾರರಾಗಿ ಹಾರ್ಮೋನಿಯಂ ನುಡಿಸಿದವರು. ನಾವು ನಮಸ್ಕರಿಸಿ ಸುತ್ತ ಕೂತೆವು. ‘ಹ್ಞಾಂ ಹೇಳ್ರಿ. ಏನ್ ಬಂದದ್ದು? ಎಲ್ಲಿಂದ ಬಂದಿರಿ?’ ಎಂದರು ಬಿಜಾಪುರೆ. ‘ನಿಮ್ಮನ್ನು ಕಾಣಲೆಂದೇ ಬಂದೆವು’ ಎಂದೆವು. ‘ಛಲೋ ಆತು. ಥಂಡಿ ಅದ. ಚಾ ಕುಡಿಯೋಣಲ್ಲ?’ ಎಂದು ಶಿಷ್ಯನತ್ತ ನೋಡಲು ಆತ ಮರಾಠಿಯಲ್ಲಿ `ಈಗ ತಂದೆ’ ಎಂದು ಕೆಳಗೆ ದೌಡಿದನು. “ನಿಮ್ಮ ಆರೋಗ್ಯದ ಗುಟ್ಟು ಏನು?’ ಎಂದೆ. ಆತ್ಮವಿಶ್ವಾಸ ತುಂಬಿದ ಗಟ್ಟಿದನಿಯಲ್ಲಿ `‘ಸಂಗೀತ. ನಮ್ಮ ಸಂಗೀತ ಮಂದಿಯೆಲ್ಲ ದೀರ್ಘಾಯುಷ್ಯದೋರು. ಹಾಡೋದೇ ದೊಡ್ಡ ಪ್ರಾಣಾಯಾಮ ಆಗ್ತದ’’ ಎಂದು ನಕ್ಕರು. ಹಿನ್ನೆಲೆ ಕೆದಕಿದೆ: “ನಮ್ಮ ಮುತ್ಯಾ ಮೂಲಮಂದಿ ಬಿಜಾಪುರದವರಂತ. ನಮ್ಮಪ್ಪ ಸಾಲಿ ಮಾಸ್ತರ ಇದ್ದರು. ದೊಡ್ಡ ಸಾಹಿತಿ. ಸಂಗೊಳ್ಳಿ ರಾಯಣ್ಣ ನಾಟಕ ಬರದೋರು. ಅವರಿಗೆ ಅಥಣಿ ತಾಲೂಕ ಕಾಗವಾಡಕ್ಕ ವರ್ಗ ಆಯ್ತು. ಮುಂದ ಬೆಳಗಾಂವ್ಞಿ ಸೇರಿಕೊಂಡಿವಿ’ ಎಂದರು. ಸಂಗೀತದ ಹಿನ್ನೆಲೆ ಕೇಳಿದೆ: ‘ರಾಮಕೃಷ್ಣ ಬುವಾ ವಝೆ ನನ್ನ ಗುರುಗಳು. ನನಗ ವೋಕಲ್ ಕಲೀಲಿಕ್ಕ ಆಸೆಯಿತ್ತು. ಯಾನ್ ಮಾಡೋದರಿ,  ದನಿ ಒಡದಬಿಡ್ತು. ಆವಾಜ್ ಹೋಗಿಬಿಡ್ತು. ಅದಕ್ಕ ಈ ಪೇಟಿ ಕಡಿ ಬಂದಬಿಟ್ಟೆ. ಈಗಲೂ ಥೋಡಥೋಢ ಹಾಡ್ತೀನಿ. ಭೀಮಸೇನ ಜೋಶಿ, ಗಂಗೂಬಾಯಿ ಹಾನಗಲ್ಲ, ಬಸವರಾಜ ರಾಜಗುರು, ಕುಮಾರಗಂಧರ್ವ, ಮಾಣಿಕವರ್ಮ, ಅಮೀರಖಾನ್- ಹೀಂಗ ಬೇಕಾದಷ್ಟ ಮಂದಿಗೆ ಸಾಥ್ ಮಾಡೀನಿ” ಎಂದರು. `ಯಾರ ಜತೆ ಹೆಚ್ಚು ಸಂತೋಷ ಸಿಕ್ಕಿತು’ ಎನ್ನಲು `ಅಮೀರ್‍ಹುಸೇನ್ ಖಾನ್ ಹಾಡಿಕೆಗೆ. ಅವರು ಭಯಂಕರ ಛಲೋ ಹಾಡ್ತಿದ್ದರು’ ಎಂದರು. ಹೀಗೇ ಹೊರಗೆ ಹನಿಯುತ್ತಿದ್ದ ತುಂತುರು ಮಳೆಯಂತೆ ಮಾತುಕತೆ ನಡೆಯಿತು. ಅವರ ಮಾತೊ, ಫಾರಸಿ ಮರಾಠಿ ಕನ್ನಡ ಹದವಾಗಿ ಬೆರೆತದ್ದು. ನಮಗೆ ಅವರು ಪೇಟಿಯ ಮೇಲೆ ಬೆರಳಾಡಿಸಿ ನಾದ ಹೊರಡಿಸಿದರೆ, ಕಿವಿಯ ಮೇಲೆ ಹಾಕಿಕೊಂಡು ಹೋಗಬೇಕು ಎಂದಾಸೆ. ಸಂಗೀತವೇ ಒಂದು ಸಂಕರ ಕಲೆ. ಬೆರಕೆಯಿಲ್ಲದೆ ಅದು ಹುಟ್ಟುವುದೇ ಇಲ್ಲ. ಅದರಲ್ಲಿ ಈ ಹಾರ್ಮೊನಿಯಂ ತಾನು ಹುಟ್ಟಿಸುವ ಸಮಸ್ತ ಸ್ವರಗಳನ್ನು ಬೆರೆಸುವ ಮಾಯಾಮಂಜೂಷ. ಹಿಂದೊಮ್ಮೆ ಅದರ ಕವಚ ತೆಗೆದು ಅದು ಹೇಗೆ ಕೆಲಸ ಮಾಡುತ್ತದೆ ಎಂದು ಪರೀಕ್ಷಿಸಿದ್ದೆ. ಕುಲುಮೆಯ ತಿದಿಯಂತೆ ಹಿಂಬದಿಯ ತೂತುಗಳ ಮೂಲಕ, ಪ್ರಾಣಾಯಾಮದ ಕುಂಭಕದಂತೆ ಗಾಳಿ ಒಳಗೆ ತುಂಬಿಕೊಳ್ಳುತ್ತದೆ. ಮುಂಭಾಗದಲ್ಲಿರುವ ಕರಿಬಿಳಿ ಮನೆಗಳನ್ನು ಬೆರಳಿಂದ ಒತ್ತಿದರೆ, ತುಂಬಿಕೊಂಡ ಉಸಿರು ಅಗತ್ಯಕ್ಕೆ ತಕ್ಕನಾಗಿ ರಂಧ್ರ್ರವಿರುವ ಕೊಂಡಿಗಳ ತುದಿಗಳಿಂದ ಹೊರಟು ಬಗೆಬಗೆಯ ಏರಿಳಿತಗಳಲ್ಲಿ ನಾದ ಹೊಮ್ಮಿಸುತ್ತದೆ. ಏಕಕಾಲಕ್ಕೆ ಹೊಮ್ಮುವ ಈ ಹಲವು ನಾದಗಳು ಒಂದಾಗುತ್ತ ಹೊಳೆಯಂತೆ ಹರಿಯುತ್ತವೆ. ನಾನು ಶೇಷಾದ್ರಿ ಗವಾಯಿ ಹಾಗೂ ಪುಟ್ಟರಾಜ ಗವಾಯಿ ಅವರ ಹಾರ್ಮೋನಿಯಂ ಕೇಳಿರುವೆ. ಪುಟ್ಟರಾಜರು ಪೇಟಿಯನ್ನು ಶಹನಾಯಿ ದನಿ ಹೊರಡುವಂತೆ ನುಡಿಸಬಲ್ಲವರಾಗಿದ್ದರು. ಕಂಪನಿ ನಾಟಕಗಳು ಶುರುವಾಗುವಾಗ ಗವಾಯಿ ಮಾಸ್ತರನು ಪೇಟಿಯ ಮೇಲೆ ಬೆರಳಾಡಿಸಿದರೆ, ಇಡೀ ಥಿಯೇಟರಿನ ಶಾಬ್ದಿಕ ಕಸವನ್ನೆಲ್ಲ  ಕಸಬರಿಕೆ ತೆಗೆದುಕೊಂಡು ಗುಡಿಸಿದಂತಾಗಿ, ಮನಸ್ಸೂ ವಾತಾವರಣವೂ ಶುದ್ಧವಾಗಿ,  ರಸಿಕರಿಗೆ ನಾಟಕ ನೋಡಲು ಬೇಕಾದ ಸಹೃದಯ  ಮನಃಸ್ಥಿತಿ ಸಿದ್ಧವಾಗುತ್ತದೆ. ಪೇಟಿಯಿಲ್ಲದೆ ನಾಟಕವಿಲ್ಲ. ಹರಿಕತೆಯಿಲ್ಲ. ಸಿನಿಮಾ ಗೀತೆಗಳಿಲ್ಲ. ಭಜನೆಯಿಲ್ಲ. ಭಾರತೀಯ ಸಂಗೀತದಲ್ಲಿ ಹಾರ್ಮೋನಿಯಂ ಸರ್ವಾಂತರ್ಯಾಮಿ.ಹೀಗೆ ಬಹುರೂಪಿಯಾದ ಈ ವಾದ್ಯ ಸ್ಥಳೀಕವಲ್ಲ. ಯೂರೋಪಿನಿಂದ ಬಂದಿದ್ದು. ಅದು ವಲಸೆ ಬಂದು ಇಲ್ಲಿನ ಅಗತ್ಯಗಳಿಗೆ ರೂಪಾಂತರ ಪಡೆದ ಕತೆ ರೋಚಕ. ಅದರ ಜತೆ ಮುಕ್ಕಾಲು ಶತಮಾನ ಕಾಲ ಕಳೆದಿರುವ ಬಿಜಾಪುರೆ ಹೇಳಿದರು: ‘ನೋಡ್ರಿ. ಇದು ಪ್ಯಾರಿಸ್ಸಿಂದು. ನಾಟಕಕ್ಕ ಅಂತ ತಂದದ್ದು. ನಮ್ಮ ಹಿಂದೂಸ್ತಾನಿ ಸಂಗೀತಕ್ಕ ಇದರಷ್ಟು ಯೋಗ್ಯ ಟ್ಯೂನಿಂಗ್ ಕೊಡೋದು ಮತ್ತ ಬ್ಯಾರೆ ಯಾವುದು ಇಲ್ಲ’.  ಸಂಗೀತ ಕಛೇರಿಯಲ್ಲಿ ತಬಲ ಪೇಟಿ ತಂಬೂರಿ ಮುಂತಾದ ಪಕ್ಕವಾದ್ಯದ ಸಾಥಿದಾರರು ಎಷ್ಟೇ ಪ್ರತಿಭಾವಂತರಿದ್ದರೂ, ಅವರದು ಎರಡನೇ ಸ್ಥಾನ. ಕೇಂದ್ರಬಿಂದು ಹಾಡುಗಾರರು; ವಾದ್ಯಸಂಗೀತವಿದ್ದರೆ ವಾದ್ಯಕಾರರು. ಎರಡನೇ ಸ್ಥಾನದಲ್ಲಿರಬೇಕಾದ ಇಕ್ಕಟ್ಟೇ ಕೆಲವಾದರೂ ಪ್ರತಿಭಾವಂತರನ್ನು ಪ್ರಯೋಗಗಳಿಗೆ ಪ್ರೇರೇಪಿಸಿರಬೇಕು. ವಿಜಾಪುರೆ ಸ್ವತಂತ್ರವಾಗಿ ಪೇಟಿ ಬಾರಿಸುತ್ತ, ಅದರಲ್ಲಿ ಹಾಡುಗಳನ್ನು ನುಡಿಸುತ್ತಿದ್ದರಂತೆ. ಅದನ್ನು ಗಾಯಕಿ ಶೈಲಿ ಎನ್ನುವರು. “ಹಾರ್ಮೊನಿಯಂ ಹಾಡಿನಂಗ ಬಾರಿಸೋನು ನಾನ ಒಬ್ಬನೇ ಉಳದೀನಿ. ಹಾಡಿನ ಧ್ವ್ವನಿ ಬರೋಹಂಗ ಇದರ ಮ್ಯಾಲ ಸಂಶೋಧನ ಮಾಡೀನಿ’ ಎಂದು ಮಗುವಿನಂತೆ ಬಚ್ಚಬಾಯಲ್ಲಿ ನಕ್ಕರು. ನಮಗೆ ಅದೃಷ್ಟವಿರಲಿಲ್ಲ. ವಿಜಾಪುರೆ ಪೇಟಿ ನುಡಿಸಲು ಒಲ್ಲೆನೆಂದರು.  ಪಾಠ ಹೇಳಿ ದಣಿದಿದ್ದರೊ, ಅರೆಗತ್ತಲೆಯಲ್ಲಿ ಬೇಡವೆನಿಸಿತೊ ತಿಳಿಯದು. ‘ಈಗ ಬೇಡ. ತಬಲ ಸಾಥಿಯಿಲ್ಲ. ಇನ್ನೊಮ್ಮೆ ಬರ್ರಿ. ಬೇಕಾದಷ್ಟು ನುಡಸ್ತೀನಿ. ನನ್ನ ಶಿಷ್ಯರು ಹಾರ. ಅವರು ಹಾಡ್ತಾರ’ ಎಂದು ಶಿಷ್ಯರಿಗೆ ‘ಭಾಳಾ, ಯೂನಿವರ್ಸಿಟಿಯಿಂದ ಪ್ರೊಫೆಸರ್ ಮಂದಿ ಬಂದಾರ. ಥೋಡ ಹಾಡ್ರಿ’ ಎಂದರು. ಕೇಳಿದರೆ ತಮ್ಮ ಕರುಳನ್ನೂ ಬಗೆದುಕೊಡುವಷ್ಟು ಭಕ್ತಿ ತುಂಬಿದಂತಿದ್ದ ಆ ತರುಣ ತರುಣಿ, ಗುರುವಿನ ಅಪ್ಪಣೆ ನೆರವೇರಿಸುತ್ತಿರುವ ಆನಂದವನ್ನೂ ಅಪರಿಚಿತರ ಮುಂದೆ ಸಂಕೋಚವನ್ನೂ ಸೂಸುತ್ತ, ತಲಾ ಒಂದೊಂದು ಮರಾಠಿ ಅಭಂಗ ಹಾಡಿದರು. ಅದೇ ಹೊತ್ತಿಗೆ ಸಂಗೀತಪಾಠದಿಂದ ಮಗಳನ್ನು ಕರೆದೊಯ್ಯಲು ಬಂದಿದ್ದ ಒಬ್ಬ ತಾಯಿ, ತನ್ನ ಕರುಳಕುಡಿ ಹಾಡುವುದನ್ನು ಮರೆಯಲ್ಲಿ ನಿಂತು ನೋಡುತ್ತ ಆನಂದ ಪಡುತ್ತಿದ್ದುದು ಮಬ್ಬುಬೆಳಕಲ್ಲೂ ಫಳಫಳಿಸುತ್ತಿತ್ತು. ಬಿಜಾಪುರೆ ತಾವು ಕೊಟ್ಟ ಗುಟುಕನ್ನು ತುಪ್ಪುಳಿಲ್ಲದ ಮರಿಗಳು ನುಂಗುವುದನ್ನು ನೋಡುವ ತಾಯ್ ಹಕ್ಕಿಯಂತೆ, ಮಡಿಲಲ್ಲಿ ಮಲಗಿದ ಕೂಸು ತಾನು ಉಚ್ಚರಿಸಿದ ಶಬ್ದಗಳನ್ನು ತೊದಲುತೊದಲಾಗಿ ಅನುಕರಿಸುತ್ತಿರಲು ಗಮನಿಸುವ ಅಜ್ಜಿಯಂತೆ, ಶಿಷ್ಯರ ಮುಖಗಳನ್ನೇ ತದೇಕ ನೋಡುತ್ತಿದ್ದರು. ಚಹ ಬಂತು. ಸಂಗೀತ ಕೇಳಲಾಗದ ನಿರಾಸೆಯಲ್ಲಿ ಚಹ ಸೇವಿಸುತ್ತಿರುವಾಗ, ಬಿಜಾಪುರೆ “ಈಗ ಗುರ್ತಾಯ್ತಲ್ಲ, ಮತ್ತೊಮ್ಮೆ ಬರ್ರಿ. ಇಡೀ ದಿವಸ ಬೇಕಾರ ಕೂಡೋಣು. ಬೇಕಾದಂಗ ಬಾರಸ್ತೀನಿ. ಇನ್ನ ಕರ್ನಾಟಕದೊಳಗ ಗಂಗೂಬಾಯಿ ನಾನೂ ಏಣಗಿ ಬಾಳಪ್ಪ ಮೂವರಿದ್ದಿವಿ. ಗಂಗೂಬಾಯಿ ಹ್ವಾದಳು. ನಾವಿಬ್ಬರು ಉಳದೀವಿ’ ಎಂದರು. ಮುಂದೆ ಅವರು (1917-2010) ಕಳಿತ ಎಲೆ ಚಳಿಗಾಲದಲ್ಲಿ ಸಣ್ಣಸಪ್ಪಳ ಹೊರಡಿಸಿ ಹಗುರಾಗಿ ನೆಲಕ್ಕೆ ಇಳಿಯುವಂತೆ ಹೋಗಿಬಿಟ್ಟರು. ಅವರ ಹಾರ್ಮೊನಿಯಂ ಕೇಳುವ ಕನಸು ಹಾಗೆಯೇ ಉಳಿದುಬಿಟ್ಟಿತು. (ನಾನು ಹಿಂದೆ ಪಂಡಿತ್ ಬಿಜಾಪುರೆ ಅವರ ಮೇಲೆ ಬರೆದಿದ್ದ ಪುಟ್ಟಲೇಖನವಿದು. ಬೆಳಗಾವಿಯ ಕವಿ ಕವಿತಾ ಕುಸುಗಲ್ಲ ಇದನ್ನು ಓದಬಯಸಿದರು. ಇದು ಆ ಬರೆಹ.) ********************** ಲೇಖಕರ ಬಗ್ಗೆ: ರಹಮತ್ ತರಿಕೆರೆಯವರು- ಕನ್ನಡದ ಗಮನಾರ್ಹ ಲೇಖಕ. ಹಂಪಿ ವಿಶ್ವವಿದ್ಯಾಲಯದ ಪ್ರೋಫೆಸರ್. ನಾಡಿನ ಸಂಸ್ಕೃತಿ, ಸೌಹಾರ್ದತೆಯ ಬೇರುಗಳ ಜಾಡು ಹಿಡಿದು, ಆಯಾ ಊರುಗಳಿಗೆ ಹೋಗಿ, ಮಾಹಿತಿ ಹಾಕಿ, ಅಲ್ಲಿನ ಜನರ ಜೊತೆ ಬೆರೆತು, ಸಂಶೋಧನಾ ಲೇಖನಗಳನ್ನು ಬರೆದವರು.‌ಕರ್ನಾಟಕದ ಸಂಗೀತಗಾರರು ಹಾಗೂ ಅವರು ದೇಶದ ಇತರೆ ಭಾಗಗಳಲ್ಲಿ ನೆಲೆಸಿದವರ ಬಗ್ಗೆ ಹುಡುಕಾಡಿ ಬರೆದವರು. ಅವರ ನಿರೂಪಣಾ ಶೈಲಿ ಅತ್ಯಂತ ಆಕರ್ಷಕ. ಮನಮುಟ್ಟುವಂತೆ ಬರೆಯುವ ರಹಮತ್ ತರೀಕೆರೆ ಕನ್ನಡದ ,ಬಹುತ್ವದ ,ಸೌಹಾರ್ದತೆಯ ಪ್ರತೀಕವೂ ಆಗಿದ್ದಾರೆ

Read Post »

ಪುಸ್ತಕ ಸಂಗಾತಿ

ಕೂರಿಗಿ ತಾಳು

ಪುಸ್ತಕ ಪರಿಚಯ ಕವಿತೆ ಭಾಷೆಯ ಉಪಯೋಗದ ಒಂದು ಕಲೆ. ಭಾಷೆಯ ಉಪಯೋಗದಲ್ಲಿ ಭಾಷೆಯ ಅರ್ಥದೊಂದಿಗೆ ಅಥವಾ ಅರ್ಥದ ಬದಲು ಸೌಂದರ್ಯ ಮತ್ತು ಭಾವನಾತ್ಮಕತೆಯನ್ನು ಹೊರತರುವ ಪ್ರಕಾರ ಇದು.ಕಾವ್ಯವೆನ್ನುವುದು ಹುಡುಕಾಟವಲ್ಲ, ಅದೊಂದು ಮಿಡುಕಾಟ. ಕಾವ್ಯದಲ್ಲಿ ಮನರಂಜನೆ, ಶ್ರೀಮಂತಿಕೆ ಮತ್ತು ಉದಾತ್ತತೆ ಇರಬೇಕು. ಅದನ್ನು ಓದಿದವರು ಮೊದಲಿಗಿಂತ ಬೇರೆಯದ್ದೇ ವ್ಯಕ್ತಿತ್ವ ಹೊಂದಿದವರಾಗಿರಬೇಕು. ಅಂತಹ   ಕಾವ್ಯ ಶ್ರೇಷ್ಠ ಕಾವ್ಯ ಎನಿಸಿಕೊಳ್ಳುತ್ತದೆ .  ಕಾವ್ಯದಲ್ಲಿ ಭಾವದ ಅತೀ ಸಾಮಾನ್ಯತೆ ಇದ್ದರೆ ಅದು ಕಾವ್ಯದ ದೋಷ. ಇದರ ಸೀಮೋಲ್ಲಂಘನ ಮಾಡಬೇಕು. ಅಂತೆಯೇ ಕಾವ್ಯದಲ್ಲಿ ಅಲಂಕಾರ ಅತಿಯಾದರೆ ಅದೂ ಕೂಡ ದೋಷ. ಧ್ವನಿ ಅತಿಯಾದರೆ ಕಾವ್ಯದ ಪ್ರಭಾವ ಕುಗ್ಗುತ್ತದೆ. ಈ ವಾಸ್ತವತೆಯ ಅರಿವು ಪ್ರತಿಯೊಬ್ಬ ಕವಿಗೂ ಇರಲೇ ಬೇಕಾಗುತ್ತದೆ.                ಅತಿಯಾದ ಕಾವ್ಯಪ್ರೀತಿ ,ಭೂಮಿ ಪ್ರೀತಿ, ಮನುಷ್ಯ ಪ್ರೀತಿ ಹೊಂದಿರುವ ರಾಮಣ್ಣ  ಅಲ್ಮರ್ಸಿಕೇರಿಯವರು’ಕೂರಿಗೆ ತಾಳು’ ಅನ್ನುವ ವಿಶಿಷ್ಟವಾದ ಹಾಗು ಅಪ್ಪಟ ಗ್ರಾಮ್ಯ ಭಾಷೆಯ ಸೊಗಡು ಇರುವ ಕಾವ್ಯ ಸಂಕಲನ ಹೊರತಂದಿದ್ದಾರೆ. ಸಂಕಲನದ ಹೆಸರೇ ಓದುಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಡಿ.ರಾಮಣ್ಣ ಅಲ್ಮರ್ಸಿಕೇರಿಯವರ ಈ ಸಂಕಲನ ಅವರ ಅನುಭವ, ಕೃಷಿ ಬದುಕಿನ ಒಡನಾಟ, ತನ್ನೂರಿನ ಅದಮ್ಯ ಪ್ರೇಮ,ಭವಬಂಧನದ ರೀತಿನೀತಿಗಳನ್ನು ತಮ್ಮ ಕವಿತೆಗಳಲ್ಲಿ ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ.ಕೊಯ್ದು,ಕೊರೆದು,ಕೂಡಿಟ್ಟುಒಕ್ಕಲಿಮಾಡಿ,ಸುಗ್ಗಿ ಮಾಡುತಹಂತಿ ಹಾಡು ಹಾಡಿಬಂಡಿಗೆ ಬಲವಾದ ಹೋರಿ ಹೂಡಿನೂರು ಚೀಲದ ಹಗೇವು ತುಂಬಿಸಿಗರ್ವದಿಂದ ಬೀಗುತ್ತಿದ್ದರು ನನ್ನೂರಿನ ಜನರು”ಅಂತ ತನ್ನೂರಿನ ಜನರ ಬಗ್ಗೆ ಅಭಿಮಾನದಿಂದ ಕವಿ ಹೇಳಿದ್ದಾರೆ. ಜನ್ಮಕ್ಕೆ ಕಾರಣನಾದ ಅಪ್ಪನೆಂದರೆ ಎಲ್ಲಾ ಮಕ್ಕಳಿಗೂ ಅಪ್ಯಾಯಮಾನ. ತೋಳುಗಳಲ್ಲಿ ಅಪ್ಪಿ ಬದುಕಿನಲಿ ಭದ್ರತೆಯ ಭಾವ ಬಿಂಬಿಸಿ, ಕೈ ಹಿಡಿದು ತಪ್ಪು ಹೆಜ್ಜೆಯ ಜೊತೆ ಹೆಜ್ಜೆ ಬೆರೆಸಿ ಹೊರ ಜಗತ್ತಿಗೆ ತಮ್ಮನ್ನು ಪರಿಚಯಿಸುವ ಅಪ್ಪನೆಂದರೆ ಪುಳಕ, ಅಪ್ಪನೆಂದರೆ ಜಗದ ಸಿರಿಯನ್ನೆಲ್ಲ ಬೊಗಸೆ ಬೊಗಸೆಯಲಿ ಮೊಗೆದು ಕೊಟ್ಟವನು. ಅಪ್ಪನೆಂದರೆ ಬದುಕಿನಲಿ ಚೈತನ್ಯ ತುಂಬಿದವನು. ಅಪ್ಪನೆಂದರೆ ಬೆರಗುಗಣ್ಣಿನಲಿ ಪ್ರಪಂಚ ನೋಡುವಂತೆ ಮಾಡಿದವನು , ತಪ್ಪು ತಪ್ಪು ಹೆಜ್ಜೆ ಇರಿಸುವಾಗ ಕೈ ಹಿಡಿದು ನಡೆಸಿದವನು, ಹೆಗಲ ಮೇಲೆ ಕೂರಿಸಿಗೊಂಡು ಹಾದಿಯುದ್ದಕ್ಕೂ ನಡೆದವನು, ಬಿದ್ದು ಗಾಯ ಗೊಂಡಾಗ ಮೈ ದಡವಿ ರಮಿಸಿದವನು, ಹೊಳೆಯಲ್ಲಿ ಈಜು ಕಲಿಸಿದವನು, ಮಳೆಯಲ್ಲಿ ನೆನೆದು ಜ್ವರ ಬರಿಸಿಕೊಂಡಾಗ ಅಮ್ಮನಂತೆ ಸೇವೆ ಮಾಡಿದವನು ಹೀಗೆ ಬದುಕಿನ ಒಂದೊಂದು ಮಜುಲುಗಳಲ್ಲೂ ತನ್ನ ಛಾಪು ಮೂಡಿಸಿ “ನಿನ್ನಂತ ಅಪ್ಪ ಇಲ್ಲಾ” ಅಂತ ಅನ್ನಿಸಿಕೊಂಡಂತಹ ಅಪ್ಪ ಕವಿಯ ಬದುಕಿನಲ್ಲು ಮಹತ್ವದ ಸ್ಥಾನ ಪಡೆದು ಗೆಳೆಯನಂತೆ, ತಾಯಿಯಂತೆ, ಗುರುವಂತೆ, ಮಾರ್ಗದರ್ಶಿಯಂತೆ, ಹಿತೈಷಿಯಂತೆ ಮಕ್ಕಳ ಬಾಳಿನಲ್ಲಿ ಬೆಳಕಾಗಿ ಬೆಳಕು ತಂದವರು.ಮಗನಿಗಾಗಿ ಏನೆಲ್ಲಾ ಕಷ್ಟಪಟ್ಟ ಅಪ್ಪ ಕೊನೆಗೆ“ಹೂಡುವ ಎತ್ತು ಮಾರಿ ಮನೆಯ ಹೊಸ್ತಿಲುದಾಟುವಾಗ ಎಡವಿ ಬಿದ್ದು ನಿಟ್ಟುಸಿರು ಬಿಟ್ಟುಕಣ್ಣು ಮುಚ್ಚಿ ನನ್ನ ಮಗ ಚೆನ್ನಾಗಿ ಓದಬೇಕೇಂದುಕನವರಿಸುತ್ತಾ ಜೀವಬಿಟ್ಟ ಅಪ್ಪನಹತ್ತಾರು ಪ್ರಶ್ನೆಗಳಿಗೆಮಗ ಮಾತ್ರ ಉತ್ತರ”ಹೃದಯ ವಿದ್ರಾವಕ ಈ ಸನ್ನಿವೇಶ,ಸಂದರ್ಭ ಓದುಗರ ಮನಸ್ಸನ್ನು ಕರಗಿಸಿ ಕಣ್ತುಂಬಿಸಿ ಬಿಡುತ್ತದೆ.ಛಲಗಾತಿ ಗೆಳತಿಯೆಂದರೆ ಕವಿಗೆ ಪ್ರೀತಿಯ ಕಡಲು,ಚಂದ್ರಮಾನ ಬೆಳಕು ಚೆಲ್ಲಿದವಳು,ಎದೆ ಸೆಟೆದು ನಿಂತ ಛಲಗಾತಿ ಗೆಳತಿ , ಹೀಗೆಲ್ಲ ಇರುವ ಗೆಳತಿಗೆ ಹೀಗೆ ಹೇಳುತ್ತಾರೆ.ಬೆಳೆದು ಬೆಟ್ಟವಾಗಬೇಕೆಂಬಮಹದಾಸೆಯ ಕನಸು ಹೊತ್ತುನಡೆವ ಅವಳು ನಿಗಿನಿಗಿಕೆಂಡದಂತಹ ಸೂರ್ಯನಾಗುವಾಸೆಕಡುಕಷ್ಟ ಪೊರೆದು ಸುಖದೆಡೆಗೆಹೆಜ್ಜೆ ಹಾಕುವ ಗಳಿಗೆನಾ ಸಾಕ್ಷಿ ಆಗಬೇಕೆಂಬ ಆಸೆ ಹೊತ್ತವನು ಎಂದು ಬಯಸುತ್ತಾರೆ.ಜಾತಿ ಭೂತದ ಬಗ್ಗೆಯು ಕವಿಗೆ ತೀವ್ರ ಅಸಮಾಧಾನವಿದೆ.ಮುಗ್ಧಮನಸ್ಸುಗಳನ್ನು ಒಡೆಯುವ ಮತಾಂಧರನ್ನು ಕಂಡಾಗ ಕೆರಳಿ ಕೆಂಡವಾಗುವ ಕವಿಹಗಲೆಲ್ಲ ನಮ್ಮನ್ನಗಲದಹಾಲು ಬಾನುಂಡು ಅಕ್ಕರೆಯ ಮಾತಾಡಿದಿನವಿಡಿ ದುಡಿಸಿಕೊಂಡುಕತ್ತಲ ರಾತ್ರಿಯಲ್ಲಿ ಜಾತಿ ಲಾಬಿ ಮಾಡುವರಾಕ್ಷಸರನ್ನು ಕಂಡು ನಡುಗಿ ಹೋಗಿದ್ದೇನೆಎಂದು ಭೀತರಾಗಿ ಸ್ವಾರ್ಥ ಅವಕಾಶವಾದಿಗಳ ಕಂಡು ದಂಗು ಬಡಿದು ನಯವಂಚಕರ ವಂಚನೆಗೆ ರೋಸಿಹೋಗಿದ್ದಾರೆ.ಬರೀ ನಿರಾಸೆ,ಸಂಕಟ ನೋವು ಮಾತ್ರ ತೋರಿದೆ ಆಶಾವಾದಿಯಾಗುತ್ತಾ ಹೋಗುತ್ತಾರೆ. ಈ ಪ್ರಪಂಚದ ಎಲ್ಲಾ ದ್ವೇಷ, ಅಸೂಯೆ, ಸ್ವಾರ್ಥ,ಮೋಹ , ಮತ್ಸರ ಮಾಯವಾಗಿ, ಕೋಮುಗಲಭೆ,ಜಾತಿಸಂಘರ್ಷಗಳ ದುರಂತ ದೂರಾಗಿ ಪ್ರೀತಿ ,ಮಮತೆ ಮಾನವೀಯತೆ ಹೊಳೆಯಾಗಿ ಹರಿದುಅಣ್ವಸ್ತ್ರಗಳು ಸುಟ್ಟು ಬೂದಿಯಾಗಿಬಂದೂಕಿನ ಬಾಯಿಯ ಸದ್ದಡಗಿಯಾರಿಗೂ ಬೇಕಿಲ್ಲದ ಯುದ್ಧಗಳು ಕೊನೆಯಾಗಿ ಅನ್ನ ನೀರು ಅರಿವೆ ಅಕ್ಷರಸೂರು ಸರ್ವರಿಗೂ ಸಿಗುವಂತಾಗಲಿಎಂದು ಕವಿ ಆಶಿಸುತ್ತಾರೆ.ಮಾನವೀಯತೆ, ಮಾನವೀಯ ಜೀವ ಸೆಲೆ ಬತ್ತಿಹೋದ ವರ್ತಮಾನದ ಮರುಭೂಮಿಯಲ್ಲಿ ಮನುಷ್ಯ ಸಂಬಂಧಗಳನ್ನು ಹುಡುಕಿ ಕಾವ್ಯದ ಮೂಲಕ ಪ್ರೀತಿಯನ್ನು ಹಂಚಿ ಮನಸುಗಳ ಬೆಸೆಯುವ ಬಯಕೆ ಕವಿ ರಾಮಣ್ಣನವರದು .ಪ್ರತಿಯೊಬ್ಬ ಕವಿಯು ಪ್ರೀತಿ, ವಿಶ್ವಾಸ ಹಾಗೂ ಮನುಷ್ಯ ಪ್ರೀತಿಯನ್ನು ಎದೆಯಲ್ಲಿ ಕಾಪಿಟ್ಟುಕೊಳ್ಳುವ ಮನೋಧರ್ಮ ಹೊಂದಬೇಕಾಗಿದೆ ಎನ್ನುವ ಇವರ ವಿಶ್ವಪ್ರೇಮದ ಭಾವ ಆದರ್ಶ ಹಾಗೂ ಅನುಕರಣೀಯವಾಗಿದೆ.ದೀರ್ಘ ಕವಿತೆ ಬರೆಯುವ ಶಕ್ತಿ ಹೊಂದಿರುವ ಕವಿ ರಾಮಣ್ಣ ರವರಿಗೆ ಕಂಡುಕೊಂಡ ಎಲ್ಲವನ್ನೂ ಕವಿತೆಯಾಗಿಸುವ ತವಕ, ಹಾಗಾಗಿ ಕೆಲವೊಮ್ಮೆ ವಾಚ್ಯವಾಗುವ ಲಕ್ಷಣಗಳು ಕಂಡರೂ ಅವರ ಅನುಭವ, ನಿರಂತರ ಅಧ್ಯಯನ,ಕಾವ್ಯ ಶ್ರದ್ಧೆ, ಆಸಕ್ತಿ ಇವೆಲ್ಲವೂ ಅವರನ್ನು ಕವಿಯ ಸಾಲಿನಲ್ಲಿ ನಿಲ್ಲಿಸಲಡ್ಡಿ ಮಾಡದು.ಇವರ ಈ ಉತ್ಸಾಹ, ಧ್ಯಾನಸ್ಥತೆ, ಅಧ್ಯಯನ ಶೀಲತೆ ಮತ್ತಷ್ಟು ಹೆಚ್ಚಾಗಿ ಶ್ರೇಷ್ಠ ಕಾವ್ಯದ ಕೊಡುಗೆ ಸಾಹಿತ್ಯ ಕ್ಷೇತ್ರಕ್ಕೆ ದಕ್ಕಲಿ ಎಂದು ಆಶಿಸುತ್ತೇನೆ. ****** ಎನ್ ಶೈಲಜಾ ಹಾಸನ

ಕೂರಿಗಿ ತಾಳು Read Post »

ಕಾವ್ಯಯಾನ

ಅಪ್ಪನ ಆತ್ಮ

ಕವಿತೆ ಫಾಲ್ಗುಣ ಗೌಡ ಅಚವೆ. ಇಲ್ಲೇ ಎಲ್ಲೋಸುಳಿದಾಡಿದಂತೆ ಭಾಸವಾಗುವಅಪ್ಪನ ಅತ್ಮನನ್ನ ತೇವಗೊಂಡ ಕಣ್ಣುಗಳನ್ನುನೇವರಿಸುತ್ತದೆ. ಅಪ್ಪನ ಹೆಜ್ಜೆ ಗುರುತುಗಳಿರುವಗದ್ದೆ ಹಾಳಿಯ ಮೇಲೆನಡೆದಾಡಿದರೆಇನ್ನೂ ಆಪ್ತವಾಗಿಸುಪ್ತ ಭಾವನೆಗಳನ್ನುಆಹ್ಲಾದಕರಗೊಳಿಸುತ್ತದೆ. ನಾನು ನಡೆದಲ್ಲೆಲ್ಲನೆರಳಿನಂತೆ ಬರುವ ಅದುನನಗೆ ಸದಾ ಗೋಚರಿದಂತೆ ಭಾಸ! ನನ್ನನ್ನೇ ಕುರಿತು ನೇರಬೊಟ್ಟು ಮಾಡಿ ತೋರಿಸಿದಂತೆಏನನ್ನೋ ಹೇಳುತ್ತದೆ!ದ್ವೇಷದ ಬೆಂಕಿಯಲ್ಲಿಮಗನ ಮುಖವ್ಯಗ್ರವಾಗಿರುವುದ ಕಂಡುಬೇಸರಿಸಿಕೊಂಡಿದೆಆತ್ಮದ ಮ್ಲಾನ ವದನ!! ಅನ್ಯರಿಗೆ ಅಗೋಚರವೆನಿಪಅಪ್ಪನ ಅತ್ಮಕ್ಕೂ ನನಗೂಅದೆಂಥದೋಅಲೌಕಿಕ ನಂಟು! ಅವನ ನೆನಪಿನೊಂದಿಗಿನಮುಕ್ತ ತಾದಾತ್ಮ್ಯವೇನನ್ನ ಅದ್ಯಾತ್ಮ!!! ********

ಅಪ್ಪನ ಆತ್ಮ Read Post »

ಕಾವ್ಯಯಾನ

ನನ್ನಜ್ಜ

ಕವಿತೆ ಚೈತ್ರಾ ಶಿವಯೋಗಿಮಠ ಬಸ್ಟ್ಯಾಂಡ್ ನ್ಯಾಗ ನಿಂತುಬಾರಕೋಲು ಬೇಕಾ ಅಂದಾಗಮಂದಿ ಬೇಡಿ ಕೊಡಿಸ್ದಾವ ನನ್ನಜ್ಜಇದ ಕಥಿ ನೂರ ಸರತಿ ಹೇಳಿ“ಹಠಮಾರಿ ಚೈತ್ರಾ” ಅಂದಾವ ನನ್ನಜ್ಜ ಹೆಗಲ ಮ್ಯಾಲೆ ಹೊತ್ತು ಓಣಿತುಂಬಾ ತಿರಗ್ಯಾಡಿದಾವ ನನ್ನಜ್ಜಬಾಯಿ ಒಡದರ, ತುಂಬಾ ಬಿಳಿ ಬೀಜಕೆಂಪಗ ಕಾಣೂ ಪ್ಯಾರಲ ಹಣ್ಣ ತರಾವ ನನ್ನಜ್ಜನಿಂಬುಹುಳಿ, ಪೇಪರಮಟ್ಟಿ, ಚಾಕಲೇಟ್ಗಾಂಧಿ ಮುತ್ಯಾನ ಫೋಟೋ ಮುಂದ ನಿಂದರೀಸಿಕಣ್ಮುಚ್ಚಿಸಿ, ಮುತ್ಯಾ ಕೊಟ್ಟ ನೋಡನ್ನವ ನನ್ನಜ್ಜ ಮುದುಕಿ, ನರಿ-ಒಂಟಿ ಅಂತ ನೂರ ಕಥಿಅವನ ಅಂಗಿ ಕಿಶೆದಾಗ. ಸ್ವತಂತ್ರ ಸಿಕ್ಕಾಗನಡುರಾತ್ರಿ ಮಾಸ್ತಾರ ಎಬ್ಬಿಸಿದ್ದನ್ನ ಕಥಿಮಾಡಿ ಹೇಳಿದಾಗ ಹೀರೋ ಗತೆ ಕಂಡಾವ ನನ್ನಜ್ಜಓಡಿಹೋಗಾವ ಇದ್ದೆ ಅಂತರಪಟ ಸರದು ಬೆಳ್ಳನ್ನಚೆಲುವಿ ಕಂಡ್ಲು, ಬದುಕಿದ್ನಪಾ ಅಂತಹೇಳಿ ಅಜ್ಜಿನತಾ ಲಗ್ನಾದ ಕಥಿ ಹೇಳಿ ನಗಸಾವ ನನ್ನಜ್ಜ. ತಾಯಿ ಸೇವಾ ಮಾಡಿ ತುಂಬು ಜೀವನ ಕಂಡುತನಗಿಂತ ಕಿರಿಯರ ಕಣ್ಮುಂದ ಕಳ್ಕೊಂಡುನೂವಿನ ನಂಜೆಲ್ಲಾ ಎದಿಯಾಗಾ ಮಂಜ ಮಾಡಿಗಟ್ಟಿ ಮನಸು, ಗಟ್ಟಿ ಶರೀರದಾವ ನನ್ನಜ್ಜಸೈಕಲ್ ಏರಿ ದೂರದೂರಿಗೆ ಹೋಗಿ ಸಾಲಿಕಲಿಸಿ ಬಂದು, ರಾತ್ರಿ ಹೊಲಕ್ಕ ನೀರ ಕಟ್ತಿದ್ದ ರೈತ ಮಾಸ್ತಾರನನ್ನಜ್ಜ ಸ್ವಚ್ಛ ಆಕಾಶದಾಗ ಹತ್ತಿಯಂತ ಮಾಡ ತೇಲಿಹಚ್ಚ ಹಸುರು ಶ್ರಾವಣ ಬಂತಂತ ಹಿಗ್ಗುಮುಂದಊರಿಗ ಹೊಂಟ್ರ “ಬಾರವಾ ಚೈತ್ರಾ’ ಅಂತಬಚ್ಚ ಬಾಯಿ ತಗದ ಬೆಚ್ಚಗ ಕರಿಯಾಕ ಇನ್ನಿಲ್ಲ ನನ್ನಜ್ಜ.ಮೊಮ್ಮಕ್ಕಳ ಸಾಮ್ರಾಜ್ಯದಾಗಿನ ಮಹರಾಜಾ ನೀ, “ಪ್ರಭುಗಳೆ, ಹೀಗೆ ಬನ್ನಿ” ಅಂತ ಆಡಿಶ್ಯಾಡಿದ್ರನಗಾವ ದೊರೆ ಆಳ್ವಿಕಿ ಮುಗಿಸಿ ಹೊಂಟ ನನ್ನಜ್ಜ! ***************************

ನನ್ನಜ್ಜ Read Post »

ಇತರೆ, ಸಂದರ್ಶನ

ದೇವನೂರು ಮಹಾದೇವ

ದೇವನೂರ ಮಹಾದೇವ ಸಂದರ್ಶನ ರಹಮತ್ ತರಿಕೆರೆ ಅವರಿಂದ (1999 ರಲ್ಲಿನಡೆದ ಸಂದರ್ಶನವನ್ನುಸಂಗಾತಿಯ ಓದುಗರಿಗಾಗಿ ಪ್ರಕಟಿಸುತ್ತಿದ್ದೇವೆ.) (ಕನ್ನಡದ ದೊಡ್ಡ ಲೇಖಕರ ವಿಶಿಷ್ಟತೆ ಎಂದರೆ, ಅವರು ಎಷ್ಟು ದೊಡ್ಡ ಕಲಾವಿದರೋ ಅಷ್ಟೇ ದೊಡ್ಡ ರಾಜಕೀಯ ಸಾಮಾಜಿಕ ಚಿಂತಕರು ಕೂಡ. ಇದಕ್ಕೆ ಕಾರಣ ಕರ್ನಾಟಕದ ಸಾಮಾಜಿಕ ಸನ್ನಿವೇಶಗಳೂ ಬಸವಣ್ಣ ಕುವೆಂಪು ಕಾರಂತ ಮುಂತಾದ ಚಿಂತಕ ಲೇಖಕರ ಪರಂಪರೆಯೋ ನಮ್ಮ ಲೇಖಕರ ಸಾಮಾಜಿಕ ಹಿನ್ನೆಲೆಯೊ ಗೊತ್ತಿಲ್ಲ. ‘ನನಗೆ ಏನೂ ಗೊತ್ತಿಲ್ಲ ಎಂಬ ರೀತಿಯಲ್ಲಿ ಎಂಬಂತೆ ಚಿಂತಿಸುವವರು ನಮ್ಮ ಸಂಸ್ಕೃತಿಯಲ್ಲಿ ದೊಡ್ಡ ಚಿಂತಕರು’ ಎಂದು ಪುಣೇಕರ್ ಹೇಳುವುದುಂಟು. ಈ ಮಾತು ದೇವನೂರರಿಗೆ ಅನ್ವಯವಾಗುತ್ತದೆ. ಇಲ್ಲಿರುವ ಅರೆಬರೆ ವಾಕ್ಯಗಳು, ಒಗಟಿನಂತಹ ಹೇಳಿಕೆಗಳು ಅವರ ಚಿಂತನೆಯ ಗೊಂದಲ ಅಥವಾ ಕೊರತೆಯನ್ನು ಸೂಚಿಸುವುದಿಲ್ಲ. ಬದಲಿಗೆ ಈ ಬಗ್ಗೆ ಇನ್ನೂ ಚಿಂತಿಸಬೇಕಾದ್ದಿದೆ; ಅದನ್ನು ಸರಳವಾಗಿ ಹೇಳಲು ಆಗುವುದಿಲ್ಲ ಎಂಬ ಸಂಕೀರ್ಣತೆಯನ್ನೆ ಸೂಚಿಸುತ್ತಿವೆ. ಇದನ್ನು ಸೃಜನಶೀಲತೆಯ ಬಗೆಗಿನ ವ್ಯಾಖ್ಯೆಯಲ್ಲಿ ನೋಡಬಹುದು. ಆದರೆ ಎಲ್ಲೆಲ್ಲಿ ರಾಜಕೀಯವಾಗಿ ಸ್ಪಷ್ಟ ನಿಲುವನ್ನು ತಾಳಬಹುದೊ ಅಲ್ಲೆಲ್ಲ ದೇವನೂರರು ತಾಳುತ್ತಾರೆ. ಉದಾಹರಣೆಗೆ ಜಾಗತೀಕರಣ ಕುರಿತ ವಿಚಾರದಲ್ಲಿ ಕನ್ನಡದಲ್ಲಿ ಶಿಕ್ಷಣ ಕೊಡುವ ವಿಚಾರದಲ್ಲಿ ವಚನ ಚಳವಳಿಯ ಬಗೆಗಿನ ಅವರ ವಿವರಣೆಯು ನೋಡಲು ಸರಳವಾಗಿದೆ. ಆದರೆ ಅದು ಸೃಜನಶೀಲ ಲೇಖಕನೊಬ್ಬ ಸಮಾಜವಾದಿ ಚಿಂತಕನೂ ಆಗಿ ಮಾಡಿದ ಅಪೂರ್ವ ವಿಶ್ಲೇಷಣೆಯಾಗಿದೆ. ಇಲ್ಲಿನ ಚರ್ಚೆಗಳಲ್ಲಿ ಗತದ ಬಗ್ಗೆ ಕಟು ವಿಮರ್ಶೆಯಿದೆ. ವರ್ತಮಾನದ ಬಗ್ಗೆ ಜಾಗೃತ ತಿಳಿವಿದೆ. ಭವಿಷ್ಯದ ಬಗ್ಗೆ ಕನಸಿದೆ. ಈ ಕನಸುಗಳು ವೈಜ್ಞಾನಿಕವಾಗಿ ಚಿಂತನೆ ಮಾಡುವವರ ಕಣ್ಣಲ್ಲಿ ದ್ವಂದ್ವ ಅಥವಾ ಗೊಂದಲ ಅನಿಸಬಹುದು. ಆದರೆ ಇಂತಹ ಕನಸುಗಳನ್ನು ಎಲ್ಲ ಸಮಾಜಗಳಲ್ಲಿ ಲೇಖಕರು ಕಾಣುತ್ತಾರೆ. ಹಾಗೆ ಶುದ್ಧವಾಗಿ ಅವರು ರಾಜಕೀಯ ಜೀವಿಗಳಲ್ಲ. ಯಾಕೆಂದರೆ ಸಮಸ್ಯೆಗಳನ್ನು ಲೇಖಕರು ಕೆಲವೊಮ್ಮೆ ಒಟ್ಟು ಮಾನವ ಜನಾಂಗದ ನೈತಿಕತೆಯ ಪ್ರಶ್ನೆಯನ್ನಾಗಿ ಕೂಡ ನೋಡಬಯಸುತ್ತಾರೆ. ಇದನ್ನು ದೇವನೂರರೂ ಮಾಡುತ್ತಾರೆ. ಇಲ್ಲಿ ಪ್ರಧಾನವಾಗಿ ಕಾಣುವುದು ಸಾಮಾಜಿಕ ಚಳುವಳಿಗಳ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳುವ ಪ್ರಾಮಾಣಿಕತೆ ಪರ್ಯಾಯಗಳ ಹುಡುಕಾಟ ಇನ್ನೂ ನಿಂತಿಲ್ಲ ಎಂಬ ಭರವಸೆ. -ರಹಮತ್ ತರೀಕೆರೆ) * ‘ದ್ಯಾವನೂರು’ ಸಂಕಲನದ ಕತೆಗಳನ್ನು ಬರೆವಾಗ ಇದ್ದ ಕನ್ನಡ ಸಾಹಿತ್ಯದ ವಾತಾವರಣ ನೆನಪು ಮಾಡಿಕೊಳ್ತೀರಾ? ನವ್ಯದ ವಾತಾವರಣ ತೀವ್ರವಾಗಿತ್ತು. ಅನಂತಮೂರ್ತಿ ಲಂಕೇಶ್ ತೇಜಸ್ವಿ ಕಂಬಾರ ಮತ್ತು ಅಡಿಗ ಮುಂತಾದವರು, ಸಾಹಿತ್ಯಾನೇ ಜೀವ ಅದೇ ಸರ್ವಸ್ವ ಅಂತ್ಹೇಳಿ ತೊಡಗಿಸಿಕೊಂಡಿದ್ದವರು, ಇದ್ರು. ಈಗ ನಾವು ಸೋಶಿಯಲ್ ಮೂಮೆಂಟ್ಸ್ ಜತೆಗೆ ಇದೂ ಅದೂ ಎರಡೂ ಮಿಕ್ಸ್ ಮಾಡ್ಕೊಳ್ತಾ ಇರ್ತೀವಿ, ಹೌದಲ್ಲ? ಆವಾಗ ಅದೇ ವಿಶ್ವ, ಅದೇ ರಾಜಕೀಯ, ಅದೇ ಬದುಕು, ಅನ್ನೊ ತರದವರು ಸುಮಾರು ಜನ ಇದ್ರು. * ನಿಮಗೆ ‘ಲೋಹಿಯಾವಾದಿ’ ಅಂತ ಗುರುತಿಸ್ತಾರೆ. ಅದನ್ನು ಕೇಳಿದಾಗ ಏನನ್ಸುತ್ತೆ? ಬರೆವಾಗಂತೂ ವಾದಗೀದ ಇರಲ್ಲ ನನ್ಹತ್ರ. ಉದಾಹರಣೆಗೆ ಹೇಳ್ತೀನಿ. ಕಮ್ಯುನಿಸ್ಟರ ಬಗ್ಗೆ ಸ್ವಲ್ಪ ರಿಸರ್ವೇಶನ್ ಇತ್ತು ನನಗೆ. ಆ ಟೈಮಲ್ಲಿ ಬರೆದದ್ದು ‘ಅಮಾಸ’ ಕತೆ. ಅಲ್ಲಿ ಒಂದು ಕ್ಯಾರಕ್ಟರ್ ಬರ್ತದೆ. ಅವನು ಗ್ಯಾಂಗ್‌ಮನ್ ಸಿದ್ದಪ್ಪ. ‘ಲೋಹಿಯಾ ಸಮಾಜವಾದ ಬರಬೇಕು’ ಅಂತ ಅವನ ಬಾಯಲ್ಲಿ ಬರೋಕೆ ಸಾಧ್ಯವಿಲ್ಲ. ಅಲ್ಲಿ ‘ಕಮ್ಯುನಿಸಂ ಬರಬೇಕು’ ಅಂತಾ ಹೇಳ್ತಾನೆ ಅವನು. ಅಂದ್ರೆ ಆ ತರಹದ ಪ್ರಾಮಾಣಿಕತೆ ನನಗೆ ಇದೆ. * ‘ಒಂದು ದಹನದ ಕತೆ’ ‘ದತ್ತ’ ಕತೆಗಳಲ್ಲಿ ಒಂಥರಾ ಅಂತರ್ಮುಖೀ ವಿಕ್ಷಿಪ್ತ ನಾಯಕರ ಲೋಕ ಬರುತ್ತೆ. ಆಮೇಲೆ ‘ಡಾಂಬರು ಬಂದುದು’ ಕತೆಗಳಲ್ಲಿ ಈ ಲೋಕಗಳು ನಾಟಕೀಯ ಅನ್ನೋ ಹಾಗೆ ಬದಲಾಗ್ತವೆ. ಈ ಬದಲಾವಣೆ ಹ್ಯಾಗಾಯ್ತು? ‘ಡಾಂಬರು ಬಂದುದು’ ಬರೆಯೊ ಮುನ್ನ ತೇಜಸ್ವಿಯವರ ‘ಅಬಚೂರಿನ ಪೋಸ್ಟಾಫೀಸು’ ಬಂದಿತ್ತು. ಅದು ಬಹಳ ಭಿನ್ನವಾಗಿದ್ದ ಕತೆ. ಅದು ಸ್ವಲ್ಪ ಮಟ್ಟಿಗೆ ಕಾರಣವಾಗಿರಬಹುದು ಅನ್ಸುತ್ತೆ. ಮತ್ತೆ ಈಗ್ಲೂನೂ ನನ್ನ ಆ ಎರಡು ಕತೆಗಳ ಬಗ್ಗೆ ಭಾಳ ಬೇಜಾರು ಇದೆ (ನಗು). ಅದೇನು ಮಾಡಕಾಗಲ್ಲ. ಒಂಥರಾ ಪ್ಲಾಟ್ ಮಾಡ್ಕೊಂಡು ಬರೆದ ಕತೆಗಳವು. * ಈಗ ಬಂಡಾಯ ಸಾಹಿತ್ಯ ಸಂಘಟನೆ ಹುಟ್ಟಿ ಸರಿಯಾಗಿ ೨೦ ವರ್ಷ. ಇದನ್ನು ಶುರು ಮಾಡುವಾಗ ನಿಮಗೆ ಯಾವ ಹಂಬಲಗಳಿದ್ದವು? ವಾಲೀಕಾರ ಅಲ್ಲಿ ನೆಪ ಆದ್ರು. ಆದ್ರೆ ಇದಕ್ಕೆ ಹೆಚ್ಗೆ ರೂಪ ಕೊಟ್ಟೋರು ಡಿ ಆರ್ ನಾಗರಾಜು ಮತ್ತು ಕಾಳೇಗೌಡ ನಾಗವಾರ, ಸಿದ್ಧಲಿಂಗಯ್ಯ ಈ ಥರದ ಗೆಳೆಯರು. ಅವರ್ದೇನು ಆಸೆ, ನೋವು-ಅಸಹಾಯಕತೆ ಈ ತರಹದವಕ್ಕೆಲ್ಲ ಧ್ವನಿಯಾಗಬೇಕು ಅಂತ. ಇದಕ್ಕೆ ನಂದೇನು ಆಕ್ಷೇಪಣೆ ಇರಲಿಲ್ಲ. ಭಾಗವಹಿಸಿದೆ ಅಷ್ಟೆ. ನಾನು ಚಾಲೂ ಮಾಡಿದೋನಲ್ಲ. * ಬಂಡಾಯ ಚಳುವಳಿ ಈಗ ಪಡೆದುಕೊಂಡಿರೊ ರೂಪಕ್ಕೆ ಕಾರಣ ಏನು ಹೇಳಬಹುದು? ಚಳವಳಿಯ ಒಳಗಿನ ಕಾರಣಗಳೋ ಹೊರಗಿನ ಒತ್ತಡಗಳೊ? ಹಂಗೆ ತೂಕ ಮಾಡಕ್ಕೆ ಆಗಲ್ಲ ಅನ್ಸುತ್ತೆ. ಸಮಾಜ ಭಾಳ ಮುಖ್ಯ. ಆ ಕಡೇನೂ ನೋಡ್ಬೇಕು ಅನ್ನೊ ಧೋರಣೆ ಕಡೆ ಇದು ಗಮನ ಕೊಡ್ತು. ಅದೇನಾಗುತ್ತೆ ಅಂತಂದ್ರೆ, ಇನ್ನೊಂದ್ ಕಡೆಗೆ ಇಲ್ಲಿ ಬರೀತಾ ಇದ್ರಲ್ಲ ನಮ್ಮಲ್ಲೆ, ಅವರಿಗೆ ಬರವಣಿಗೆ ಎರಡ್ನೇದಾಯ್ತು. ನವ್ಯ ಮೂಮೆಂಟಲ್ಲೆಲ್ಲ ತಾನೂ ತನ್ನ ಬರವಣಿಗೇನೇ ಮೊದಲ್ನೇದು ಉಳಿದಿದ್ದೆಲ್ಲ ಎರಡ್ನೇದು ಅನ್ನೋದಿತ್ತಲ್ಲ. ಅದು ಸ್ವಲ್ಪ ಉಲ್ಟಾ ಆಯ್ತು. ಇಲ್ಲಿ ಸುಮಾರ್ ಜನ ಬರೀಬಹುದಾದೋರು ಹುಟ್ಕಂಡ್ರು. ಆದ್ರೆ ಭಾಳ ದೊಡ್ಡ ಲೇಖಕರು ಬರಲಿಲ್ಲ ಅನ್ಸುತ್ತೆ. ಮತ್ತೆ ಜತೆಗೆ ಬಂಡಾಯ-ದಲಿತ ಚಳುವಳಿ, ದೊಡ್ಡ ಲೇಖಕರ ಮೇಲೇನೂ ಪರಿಣಾಮ ಮಾಡಿದೆ. ಹಿಂಗೆ ಯೋಚ್ನೆ ಮಾಡ್ಬೇಕು ಅಷ್ಟೇನೆ. * ಕನ್ನಡ ಸಾಹಿತ್ಯ ಪರಂಪರೇಲಿ ನಿಮ್ಮ ಮೇಲೆ ಪ್ರಭಾವ ಬೀರಿದ ಲೇಖಕರು… ಬೇಂದ್ರೆ, ಕುವೆಂಪು. * ಯಾಕೆ ಅಂತ ವಿವರಿಸಬಹುದಾ? ವಿಮರ್ಶೆ ಮಾಡಕ್ಕೆ ನಂಗೆ ಆಗಲ್ಲ. ‘ಮಲೆಗಳಲ್ಲಿ ಮದುಮಗಳು’ ಅದರ ಬಗ್ಗೆ ಸುಮಾರು ಆಕ್ಷೇಪಣೆಗಳು ಬಂದ್ವು. ಅದಕ್ಕೆ ಕೇಂದ್ರ ಇಲ್ಲ, ಮಣ್ಣು ಮಸಿ ಇಲ್ಲ ಅಂತ. ಆದ್ರೆ ಇವತ್ತಿಗೂ ಈಗ ತಾನೇ ಹುಟ್ಟಿದ ಥರ ಇದೆ ಆ ನಾವೆಲ್ಲು. ಆಮ್ಯಾಲೆ, ಈ ನವ್ಯ ಕಾಲದಲ್ಲಿ ಬಂದ್ವಲ್ಲ, ದಿ ಬೆಸ್ಟ್ ಅನ್ನೋ ಹತ್ತು ಕಾದಂಬರಿಗಳನ್ನ ಒಂದು ತಕ್ಕಡೀಲಿಟ್ರೂ, ಇದಕ್ಕೆ ತಡ್ಕಳೋ ಸಾಮರ್ಥ್ಯ ಇದೆ. ಜೊತೆಗೆ ಕುವೆಂಪು ಅವರ ದೃಷ್ಟಿಕೋನ-ದರ್ಶನ ಇದೆಯಲ್ಲ, ಅದು ಜೀವಸಂಕುಲವೇ ಒಂದು ಅನ್ನೊ ಥರದ್ದು… ಮತ್ತು ಬೇಂದ್ರೆ ಪದ್ಯಗಳು… ಪದ್ಯ ಅಂತಂದ್ರೆ ಹೇಳಕ್ಕೆ ಕಷ್ಟ ಅಲ್ವ? ಪದ್ಯ ಅಂದ್ರೆ ಬೇಂದ್ರೆ ಅನ್ನಿಸುತ್ತೆ. * ಪ್ರಾಚೀನ ಕನ್ನಡ ಸಾಹಿತ್ಯದಲ್ಲಿ ‘ಶೂನ್ಯ ಸಂಪಾದನೆ’ ಬಗ್ಗೆ ನೀವು ತಲೆ ಹಚ್ಚಿಕೊಂಡಿದ್ರಿ? ಯಾಕೆ ಅದು ಮುಖ್ಯ ಅನಿಸ್ತು? ವಚನ ಆಂದೋಲನ ಇದೆಯಲ್ಲ, ಇಡೀ ಜಗತ್ತಲ್ಲೇ ಹುಡುಕುದ್ರೂ ಸಿಗಲ್ವೇನೋ? ಆ ಥರದ ಒಂದು ಪ್ರಯೋಗ ಕರ್ನಾಟಕದಲ್ಲಿ ಆಗಿದೆ. ಉದಾಹರಣೆಗೆ ಹೇಳ್ತೀನಿ. ಮೊದಲ್ನೇದಾಗಿ ವರ್ಣಕ್ಕೆ ದೊಡ್ಡೇಟು ಕೊಟ್ರು ಅವರು. ಮತ್ತು ಎಲ್ರಿಗೂ ಪ್ರವೇಶ ಇಲ್ದೇ ಇರತಕ್ಕಂಥ ದೇವಸ್ಥಾನ ನಿರಾಕರಿಸಿದ್ರು. ಮತ್ತೆ ಗಂಡು ಹೆಣ್ಣು ಉಂಟಲ್ಲ, ಒಂಥರ ನೋಡಿದ್ರು. ಮತ್ತೆ ಜಾತಿ ಅಂತೂ ಬರಲೇ ಇಲ್ಲ ಅಲ್ಲಿ. ಆಮೇಲೆ ಮೋಕ್ಷಕ್ಕೆ ಕಾಡಿಗೆ ಹೋಗ್ಬೇಕು ತಪಸ್ ಮಾಡ್ಬೇಕು ಆ ಪರಿಕಲ್ಪನೇನೇ ಅವರಲ್ಲಿಲ್ಲ. ಮತ್ತು ಕಾಲ್ದಲ್ಲಿ ಒಳ್ಳೇದೊ ಕೆಟ್ಟದ್ದೊ ಅದಿಲ್ಲ; ಪವಿತ್ರ ಅಪವಿತ್ರ ಅದಿಲ್ಲ; ಸಂಸಾರ ಬಿಡಬೇಕು ಅಂತಿಲ್ಲ. ಸಂಸಾರ ಮಾಡ್ಕಂಡೇ- ಅಥವಾ ಇಬ್ಬರು ಹೆಂಡೀರ ಇಟ್ಕಂಡೇ ಮೋಕ್ಷ ಸಾಧ್ಯ. ಇವೆಲ್ಲ ಸಾಮಾನ್ಯ ಅಲ್ಲ. ಜತೆಗೆ ಕಲೆ ಬಗ್ಗೆ. ಬೇರೆಬೇರೆ ಧರ್ಮಗಳು ಕಲೆ ಒಂಥರ ದಾರಿ ತಪ್ಸದು ಅಂತಿರ್ತವೆ. ವಚನಕಾರರ ಚಿಂತನೆ ಕಾವ್ಯದಲ್ಲಿ ಆಗ್ತದೆ. ಬೌದ್ಧರಲ್ಲೊ ಇಸ್ಲಾಂನಲ್ಲೊ ಈ ಥರ ಬರೆಯೋದು ಧರ್ಮಕ್ಕೆ ಪೂರಕ ಅಲ್ಲ ಅನ್ನೋ ಭಾವನೆ ಇದೆ. ಇವರಲ್ಲಿಲ್ಲ. ಒಂದಾ ಎರಡಾ? ಈ ಥರದ್ದು ಹುಡುಗಾಟಾನ? ಸಾಮಾನ್ಯವಾಗಿ ಬೇರೆಬೇರೆ ಧರ್ಮಗಳಲ್ಲಿ ಒಬ್ಬ ಪ್ರವಾದಿ ಇರ್ತಾನೆ. ಅನುಯಾಯಿಗಳಿರ್ತಾರೆ. ಇಲ್ಲಿ ಎಲ್ರೂ ಸಮಾನರು. ಆದ್ರೂ ಇಡೀ ಚಳುವಳಿಯ ಒಳಗೇನೇ ಅನೇಕ ತಾತ್ವಿಕ ಭಿನ್ನಮತಗಳು ಸಂಘರ್ಷಗಳು ಇದ್ದವು ಅನ್ನೋದು ಮರೆಯೋಕಾಗಲ್ಲ. ಉದಾಹರಣೆಗೆ ಚೆನ್ನಬಸವಣ್ಣ. ಚೆನ್ನಬಸವಣ್ಣ ಚಿಕ್ಕೋನು ಅವನು. ಕೊನೇಲಿ ಬಂದು ಅದುಕ್ಕೆ ಒಂದು ರೂಪ ಕೊಡಕೆ ಪ್ರಯತ್ನಪಟ್ಟೋನು. ‘ಜಾತಿ ಮದುವೆ ಅನಾಚಾರ’ ಅಂತಾನಲ್ಲ. ಇದೊಂದು ಸಾಕಲ್ವ? ಇರಲಿ, ಅಂಥ ಚಳವಳೀನ ಈವತ್ಗೂ ನೆನಸ್ಕಳಕೆ ಆಗಲ್ವಲ್ಲ ನಮಗೆ. * ವಚನ ಪರಂಪರೆಯಲ್ಲಿ ಬಸವಣ್ಣನ ಧಾರೆ, ಅಲ್ಲಮನ ಧಾರೆ ಅಂತ ವಿಂಗಡಿಸಿ ನೋಡೋದಾದ್ರೆ, ನಿಮಗೆ ಯಾವ ಧಾರೆಯ ಜತೆ ಗುರ್ತಿಸಿಕೊಬೇಕು ಅನಿಸುತ್ತೆ? ಇದು ಬಲೇ ಕಷ್ಟ ಆಗುತ್ತೆ. ಮೊದಲ್ನೇದಾಗಿ ಎರಡೂ ಒಟ್ಟಿಗೆ ಹೋಗಬೇಕು ಅಂತ ಆಸೆಪಡಬೇಕು. ನನ್ನ ಆಸೆ ಈವಾಗ ಅಲ್ಲಮ, ಆಯ್ತಾ? ಆದ್ರೆ ಅಲ್ಲಮ ಒಂದು ಸ್ಪಿರಿಟ್ ಥರ. ಗಾಳಿ ಥರ. ಸಮಾಜದ ಮೇಲೆ ಅವನು ಯಾವ ಪರಿಣಾಮ ಮಾಡ್ತಾನೆ? ಯಾರು ಎನ್‌ಲೈಟನ್ಸೊ, ಅವರ ಮೇಲೆ ಪರಿಣಾಮ ಮಾಡ್ತಾನೆ. ಅವನೇನೂ ಕಟ್ಟಲ್ಲ. ಇಲ್ಲಿ ಸಮಾಜದ ಮೇಲೇನೇ ಅಲ್ಲೋಲ ಕಲ್ಲೋಲ ಆಗಬೇಕಲ್ಲ, ಬದಲಾವಣೆಗಳು ಆಗಬೇಕಲ್ಲ, ಅದಕ್ಕೆ ಯಾರ್ ಕಾರಣ? ಇವತ್ತು ನಮಗೆ ಸಂತರ ಜತೆಗೆ ಒಳ್ಳೇ ರಾಜಕಾರಣೀನೂ ಬೇಕು. ಗಾಂಧಿಯಷ್ಟೇ ಅಬ್ರಾಹಿಂ ಲಿಂಕನ್ ಕೂಡ ಬೇಕು. ಗಾಂಧಿಗೆ ಅಬ್ರಾಹಿಂ ಲಿಂಕನ್ ಸಿಕ್ಕಿದ್ರೆ ಬಾಳ ದೊಡ್ಡ ಸಂಗತಿಗಳು ಆಗ್ತಿದ್ವೇನೋ, ಅಲ್ವಾ? * ‘ಶೂನ್ಯಸಂಪಾದನೆ’ ಮೇಲೆ ಚರ್ಚೆ ಮಾಡ್ತಾ ಇದ್ದಿರಿ… ಶೂನ್ಯಸಂಪಾದನೇನ ಮೊದಲು ಸರಳವಾಗ್ ತಗೊಂಡೆ. ಸಾಹಿತ್ಯದ ದೃಷ್ಟಿಯಿಂದ ನೋಡ್‌ಬಿಟ್ಟಿದ್ದೆ. ಏನೋ ಮಾಡಬಹುದು ಅಂತ ಮಾಡ್ದೆ. ಆಮೇಲೆ ಹಂಗಲ್ಲ ಅನಸ್ತು. ಬೇರೆ ಬೇರೆ ಕೆಲ್ಸದಲ್ಲಿ ಸಿಗಹಾಕ್ಕಂಡು ಓದಕ್ಕಾಗ್ಲಿಲ್ಲ. * ಮಂಟೇಸ್ವಾಮಿ ಮಾದೇಶ್ವರ ಕಾವ್ಯಗಳ ಚರ್ಚೆ ಈಗ ಹೆಚ್ಚಾಗಿ ಆಗ್ತಿದೆ. ಈ ಪರಂಪರೆಗಳ ಜತೆ, ಆಧುನಿಕ ಲೇಖಕರ ಸಂಬಂಧ ಯಾವ ತರಹ ಇರಬೇಕು ಅಂತ? ಇವನ್ನ ವಸ್ತು ಥರ ಬಳಸಬಾರ್ದು. ಸುಮಾರ್ ಜನ ಏನ್ಮಾಡ್ ಬಿಡ್ತಾರೆ, ಒಂದು ಮೆಟೀರಿಯಲ್ ಅಂತ ಭಾವಿಸ್ ಬಿಡ್ತಾರೆ. ಜಾನಪದಾನ ಎಷ್ಟ್ ಜೀರ್ಣಿಸಿಕೊಳ್ಳಕೆ ಸಾಧ್ಯಾನೋ ಅಷ್ಟು ತಗೋಬೇಕು. ತಿಂದ ಆಹಾರ ಆಹಾರವಾಗೇ ಹೋಗಬಾರ್ದು. ರಕ್ತಗತ ಎಷ್ಟು ಸಾಧ್ಯವೊ ಅಷ್ಟನ್ನು ತಗಾಬೇಕು. ಇದೇ ಒಬ್ಬ ರೈಟರ್ ಮಾಡಬಹುದಾದ್ದು. ಇದೇ ಸೀಮೆಯಲ್ಲಿದ್ದ ಕುವೆಂಪು ಅವರಿಗೆ ಯಾವುದೊ ಚಾರಿತ್ರಿಕ ಕಾರಣಗಳಿಂದಾಗಿ ಈ ಪರಂಪರೆಗಳ ಜತೆ ಸಂಪರ್ಕ ಏರ್ಪಡಲಿಲ್ಲ. ಅವರಿಗೆ ಕಾದಂಬರಿ ಬರೆಯೊ ಬಗ್ಗೇನೆ ಹೀನ ಭಾವನೆಯಿತ್ತಂತೆ. ‘ಏನಪ್ಪ ಕವಿಗಳೆಲ್ಲ ಇದ್ನ ಮಾಡೋದಾ’ ಅಂತ. ಯಾಕ್ ಟಾಲ್‌ಸ್ಟಾಯ್ ಕಾದಂಬರಿ ಬರದಾ ಅಂತ ಆಮೇಲೆ ಸ್ವಲ್ಪ ಇದಾಗಿ, ಪುಣ್ಯಕ್ಕೆ ತಾವೂ ಬರೆದ್ರು. * ಪಶ್ಚಿಮದಲ್ಲಿ ಯಾವ ಲೇಖಕರು ನಿಮಗೆ ಮುಖ್ಯ ಆದ್ರು? ಹಾಂ! ಮೊದಲು ಶೇಕ್ಸ್‌ಪಿಯರ್, ಟಾಲ್‌ಸ್ಟಾಯ್. ಅದರ ಬಗ್ಗೆ ಸಂಶಯ ಇಲ್ಲ. ಇತ್ತೀಚೆಗೆ ನಾನು ಮಾರ್ಕ್ವೆಜ್‌ನ ಓದಿದೆ. ಬಹಳ ಗ್ರೇಟ್ ರೈಟರ್ ಅವನು. ಸಿಕ್ಕಾಪಟ್ಟೆ ದೊಡ್ಡ ಲೇಖಕ. * ಭಾರತೀಯ ಲೇಖಕರಲ್ಲಿ..? ವೈಕಂ ಓದಿದೀನಿ. ಈಗ ‘ಪಾತುಮ್ಮಳ ಆಡು’. ‘ಒಡಲಾಳ’ದಲ್ಲಿ ಅದರ ಇನ್‌ಫುಯೆನ್ಸ್ ಇರಬಹುದು ನನಗೆ. ಪ್ರೇಮಚಂದ್ ಇನ್‌ಫುಯೆನ್ಸ್ ಇರಬಹುದು. ಇನ್‌ಫುಯೆನ್ಸ್ ಹೆಂಗೆ ಅಂತಂದ್ರೆ, ಇನ್‌ಫುಯೆನ್ಸ್ ಅಂತ ಗೊತ್ತಾದ್ರೆ ತಪುಸ್ತೀನಿ. ಗೊತ್ತಿಲ್ಲದಲೆ ಬಂದಿರೊ ಸಾಧ್ಯತೆ ಇರ್ತದೆ. * ಮಾರ್ಕ್ವೆಜ್ ಯಾಕೆ ಗ್ರೇಟ್ ಅನಿಸಿದ? ಹ್ಞೂಂ! (ತುಂಬಾ ಯೋಚಿಸಿ…) ಮೊದಲ್ನೇದಾಗಿ ಸಮುದಾಯದ ಮನಸ್ಸು ಅವನದು. ಆಮೇಲೆ ಅವನಿಗೆ ಪ್ರಸ್ತುತಾನೆ ಕತೆ ಮಾಡೋ ಅಸಾಮಾನ್ಯವಾದ ಕಲೆ ಇದೆ. ಈಗ ಯಾರೋ ಬಂದ್ರು. ನಾವಿಲ್ಲಿ ಭೇಟಿಯಾದೊ. ಈ ಥರದ್ದು ಒಂದಿದೆ ಅಂತ ಇಟ್ಕೊಳಿ.

ದೇವನೂರು ಮಹಾದೇವ Read Post »

ಅನುವಾದ

ಶರಣಾಗಿ ಬಿಡಲೆ

ಅನುವಾದಿತ ಕವಿತೆ ಮೂಲ ಕನ್ನಡ: ವಸುಂಧರಾ ಕದಲೂರು ಇಂಗ್ಲೀಷಿಗೆ: ಸಮತಾ ಆರ್. ಶರಣಾಗಿ ಬಿಡಲೆ ನಿನ್ನ ಕಂಗಳ ಪ್ರಾಮಾಣಿಕತೆ  ನನ್ನನು ಹಿಂಬಾಲಿಸುತ್ತಿದೆ. ಭದ್ರ ಕೋಟೆ ಗಟ್ಟಿ ಬೇಲಿ ಛಿದ್ರಗೊಳಿಸಿ ಎದೆ ತಟ್ಟುತ್ತಿದೆ. ನೀನು ಮಂಡಿಯೂರಿ ಬಿಡು ನೀನೂ ಮಂಡಿಯೂರಿ ಬಿಡು ಮಾರ್ದನಿಸುವ ಮಾತುಗಳಿಗೆ ಇನ್ನೆಷ್ಟು ಕಾಲ ಕಿವುಡಾಗಿರಲಿ ಹಾದಿ ಮರೆವ ಮುನ್ನ ನಾಕು ಹೆಜ್ಜೆ ನಡೆದು ಬರಲೆ ಹನಿ ಮುತ್ತು ಜಲಗರ್ಭದ ಚಿಪ್ಪೊಳಗೆ ಕಾಣೆಯಾಗಲು ಬಿಡಬೇಡ ಮುಳುಗಿ ತೆಗೆ ಪಿಸುಮಾತು ಕೇಳುತ್ತಿದೆ ಪ್ರತಿಧ್ವನಿ ತರಂಗವಾಗಿ ಹೃದಯದಲಿ ನಯವಾಗಿ ನವುರಾಗಿ ಲಯವಾಗಿ ಕಂಪನ ಎಬ್ಬಿಸುತ್ತಿವೆ. ದುಬಾರಿ ಕಾಲ ಸಾಬೀತು  ಪಡಿಸುತ್ತಿದೆ ಕ್ಷಣಕ್ಕೊಮ್ಮೆ ಜಾರಿಹೋದ ನೆನಪುಗಳ ಈಟಿಯಿಂದ ಇರಿಯುತ್ತಾ. ನಾನು ಶರಣಾಗಿ ಬಿಡಲೆ ನಾನೂ ಶರಣಾಗಿ ಬಿಡಲೆ ————————– SHALL    I    SURRENDER The honest yearning of your eyesIs haunting me across,Destructing all the fortress’ and barricades,Now knocking at my heart. You kneel down,You too kneel down. I can’t keep all those whispersUnheard anymore,Shall I tread a few more stepsBefore the path fades. A murmur says to dive deepAnd pick the pearl drop,Before it gets trappedIn the oyster of an aquatic womb. All the echoes are transversingTo reach my heart,And trembling itWith a soft tender rhythm. The precious spear of timeIs piercing me hard,to proveThe innocence of bygone memories,Moment by moment. Shall I get surrenderedShall I too get surrendered. *******************

ಶರಣಾಗಿ ಬಿಡಲೆ Read Post »

ಪುಸ್ತಕ ಸಂಗಾತಿ

ಮೌನಯುದ್ಧ

ಪುಸ್ತಕ ಪರಿಚಯ ಮೌನ ಯುದ್ದ(ಕವನಸಂಕಲನ) ಕವಿ: ಸುರೇಶ್ ಎಲ್. ರಾಜಮಾನೆ ಪ್ರಕಾಶನ: ವಿಶ್ವ ಖುಷಿ ಪ್ರಕಾಶನ, ನವನಗರ ಬಾಗಲಕೋಟ. ಪುಟಗಳು: 92  ಬೆಲೆ: 120/- ಪ್ರಕಟಿತ ವರ್ಷ: 2018 ಕವಿಯ ಸಂಪರ್ಕ ಸಂಖ್ಯೆ: 8105631055          ಗಂಭೀರ ಕಾವ್ಯಾಧ್ಯಯನ ಮೂಲಕ ನಿರಂತರ ಅನುಸಂಧಾನದಲ್ಲಿ ತೊಡಗಿ ಕಾವ್ಯ ರಚನೆ ಕೃಷಿಗೆ ಮುಂದಾಗಿರುವ ರನ್ನಬೆಳಗಲಿಯ ಯುವಕವಿ ಸುರೇಶ್ ರಾಜಮಾನೆಯವರು “ಸುಡುವ ಬೆಂಕಿಯ ನಗು” ಎನ್ನುವ ಕೃತಿಯನ್ನು ಪ್ರಕಟಿಸುವ ಮೂಲಕ ಸಾಹಿತ್ಯ ಲೋಕವನ್ನು ಪ್ರವೇಶಿಸಿದರು. ಈಗ “ಮೌನಯುದ್ಧ”ದ ಮೂಲಕ ನಮ್ಮೊಂದಿಗೆ ಮಾತಿಗಿಳಿದಿದ್ದಾರೆ.          ಇಲ್ಲಿ ಕವಿ ಹೇಳುವಂತೆ ‘ನನ್ನ ಭಾವನೆಗಳೊಂದಿಗೆ ಮತ್ತೊಬ್ಬರ ಭಾವನೆಗಳನ್ನು ಮನಸ್ಸಿಗೆಳೆದುಕೊಂಡು ಮಾತಾಗುತ್ತೇನೆ, ಕವಿತೆಯ ಜೊತೆ ನಾನು ನಾನಾಗಿ ಹೋಗುತ್ತೆನೆ. ಭಾವವನ್ನು ಪ್ರೀತಿಸುವಷ್ಟೆ ಭಾವೊದ್ವೇಗವನ್ನು, ಸಂತೋಷವನ್ನು ಪ್ರೀತಿಸುವಷ್ಟೆ ಸಂಕಟವನ್ನು ಪ್ರೀತಿಸಬೇಕೆಂದು’ ಹೇಳುವ ಕವಿಯ ಮಾತು ಹೃದಯಸ್ಪರ್ಶಿಯಾಗಿದೆ. ‘ಬಾಚಿದಷ್ಟು ಅಗಲವಾದ ಹೆಗಲು ಬಗೆದಷ್ಟು ಭಾರವಾದ ಭಾವನೆಗಳ ಒಡಲು ನನ್ನ ಕವಿತೆ’ ಎನ್ನುವ ಕವಿ ಮನಸ್ಸು ‘ಅಂಗಳದಿ ಮಲ್ಲಿಗೆ ಬಾಡಿ ನಿಂತಿದೆ ಮೆಲ್ಲಗೆ ವಿಷದ ನೀರೆರೆದವರು ಯಾರು?’ ಎಂದು ಪ್ರಶ್ನಿಸುತ್ತದೆ. ‘ಬೆಳಗಲಿ ದೀಪ ಬಡವರ ಬಾಗಿಲಲಿ ಗುಡಿಸಲಿನಲಿ’ ಎಂದು ನಿರೀಕ್ಷಿಸುತ್ತದೆ.          “ಮೌನಯುದ್ಧ” ಕವನ ಸಂಗ್ರಹದಲ್ಲಿ ಓಟ್ಟು 56 ಕವಿತೆಗಳಿವೆ. ಕವಿ ಡಾ. ಟಿ. ಯಲ್ಲಪ್ಪ ಅವರ ಮೌಲಿಕವಾದ ಮುನ್ನುಡಿ ಹಾಗೂ ಗುರುಮಾತೆ ಲಲಿತಾ ಹೊಸಪ್ಯಾಟಿ ಅವರ ಬೆನ್ನುಡಿ ಕೃತಿಯ ಮೌಲ್ಯವನ್ನು ಹೆಚ್ಚಿಸಿದೆ. ಸಾಮಾಜಿಕ ವ್ಯವಸ್ಥೆಯಲ್ಲಿ ದಮನಿತರ ನೋವು, ನಿರಾಶೆ, ಹಸಿವು, ಬಡತನ, ಪ್ರೀತಿ-ಪ್ರೇಮ ಹಾಗೂ ಮಾನವೀಯ ಸಂವೇದನೆಗಳು ಕವಿಯ ಜೀವನ ಸಂಗ್ರಾಮದ ಏರಿಳಿತಗಳು ಇಲ್ಲಿನ ಕವಿತೆಗಳ ವಸ್ತು-ವಿಷಯಗಳಾಗಿವೆ.           ವರಕವಿ ಬೆಂದ್ರೆ ಅವರ ಗಾಢ ಪ್ರಭಾವಕ್ಕೆ ಒಳಗಾದ ಎಲ್ಲಾರ್ ಸೂರ್ಯ ಅವರು ‘ನನ್ನೊಳಗಿನ ನಾನು’ ಕವಿತೆಯಲ್ಲಿ ಅಪ್ಪನ ಹಸಿವು ಬಡತನದ ನೆನಪುಗಳನ್ನು ಕವಿತೆಯಾಗಿ ಹಸಿರಾಗಿಸಿದ್ದಾರೆ. ‘ಮಗುವಿನ ನಗುವಿನ ಗೆದ್ದಷ್ಟು ಖುಷಿ ಹಸಿವಿನ ಹೊಟ್ಟೆಗೆ ಉಂಡಷ್ಟು ಖುಷಿ’ ಎನ್ನುವ ಕವಿ ನೈಜ ಬದುಕಿನ ವಾಸ್ತವಿಕತೆಯನ್ನು ಓದುಗರೆದುರು ಬಿಚ್ಚಿಡುತ್ತಾರೆ. ಹಾಗೆಯೇ ನೀರಾಭರಣ ಸುಂದರಿ, ಸ್ವರಭಾರ, ಹೊಟ್ಟೆಯೊಳಗಿನ ಉರಿ ಹಾಗೂ ನನ್ನವ್ವ ಕವಿತೆಗಳು ಓದುಗರನ್ನು ಚಿಂತನೆಗೆ ತೊಡಗಿಸುತ್ತವೆ.          ಸಾಮಾಜಿಕ ವ್ಯವಸ್ಥೆಯಲ್ಲಿನ ಅವ್ಯವಸ್ಥೆಯ ವಿರುದ್ಧ ಕವಿಹೃದಯ “ಮೌನಯುದ್ಧ”ಕ್ಕೆ ಸಿದ್ಧವಾಗಿದೆ. ‘ಸಾಹಸ ಭೀಮ ಶಕ್ತಿಯನು ಸಾಗರವಾಗಿಸಿ ವಿಜಯದ ಕಹಳೆಯ ಮುಗಿಲ ಮುಟ್ಟಿಸಿ’ ಎನ್ನುವಲ್ಲಿ ಶಕ್ತಿಕವಿ ರನ್ನನ ಪ್ರಭಾವ ಎದ್ದು ಕಾಣುತ್ತದೆ.‍          ಕಾವ್ಯದ ಅಂತಃಸತ್ವವನ್ನು ಹೀರಿ ಮೌಲಿಕ ಕವಿತೆಗಳನ್ನು ಬರೆಯುವ ಕವಿ ಸುರೇಶ್ ರಾಜಮಾನೆಯವರಿಗೆ ಬರುವ ನಾಳೆಗಳಲ್ಲಿ ಉಜ್ವಲ ಭವಿಷ್ಯವಿದೆ. ************************ ಬಾಪು ಖಾಡೆ

ಮೌನಯುದ್ಧ Read Post »

ಕಥಾಗುಚ್ಛ

ಅಮ್ಮಿಣಿ

ಕಿರುಗಥೆ ಕೆ. ಎ. ಎಂ. ಅನ್ಸಾರಿ ಅಮ್ಮಿಣಿಗೆ ಒಂದೇ ಚಿಂತೆ… ಸೂರ್ಯೋದಯಕ್ಕೆ ಮೊದಲೇ ಹೊರಡುವ ಗಂಡ ಸುಂದ ವಾಪಸ್ಸು ಬರುವಾಗ ಕತ್ತಲೆಯಾಗುತ್ತದೆ. ಖಂಡಿತಾ ಅವನು ಹೆಚ್ಚಿನ ಸಮಯ ಲಚ್ಚಿಮಿ ಯ ಗುಡಿಸಲಲ್ಲೇ ಕಳೆಯುತ್ತಿರಬಹುದು.  ರಾತ್ರಿ ತನ್ನ ಗುಡಿಸಲು ಸೇರಿದರೆ ಗದ್ದಲ ಬೇರೆ. ಸಾರಾಯಿ ಏರಿಸದೆ ಒಂದು ದಿನವೂ ಬಂದದ್ದಿಲ್ಲ. ಹಾಗೆಂದು ಮನೆ ಖರ್ಚಿಗೆ ಕೊಡುವುದಿಲ್ಲ ಎಂದಲ್ಲ. ಮಕ್ಕಳ ಮೇಲೆ ಪ್ರೀತಿಯಿದೆ .. ಆದರೂ ಆ ಲಚ್ಚಿಮಿ ಯ ಗುಡಿಸಲಲ್ಲಿ ಅವನಿಗೆ ಏನು ಇಷ್ಟು ಕೆಲಸ .. ? ಸೌಂದರ್ಯ ದಲ್ಲಿ ನಾನು ಅವಳಿಗಿಂತ ಕಮ್ಮಿಯೂ ಇಲ್ಲ ಅವಳಾದರೂ ಕರ್ರಗೆ ಕೋಲು ಮುಖದವಳು… ಗಂಡ ಸತ್ತ ಮೇಲೆ ಕೂಲಿ ನಾಲಿ ಮಾಡಿ ಜೀವಿಸುವವಳು. ಇರುವ ಚಿಕ್ಕ ಮಕ್ಕಳನ್ನು ನೋಡಿಕೊಳ್ಳಲು ಆ ಸಂಪಾದನೆ ಸಾಕೇ ..? ತನ್ನ ಗಂಡ ಸುಂದ ಅವಳಿಗೂ ಖರ್ಚಿಗೆ ಕೊಡುತ್ತಿರಬಹುದೋ…  ?ಅಮ್ಮಿಣಿ ಹೊಸ್ತಿಲಲ್ಲಿ ಕೂತು ಚಿಂತಿಸುತ್ತಲೇ ಇದ್ದಳು. ಅಂಗಳದಲ್ಲಿ ಹಾಸಿದ್ದ ಓಲೆಬೆಲ್ಲವನ್ನು ಕೋಳಿ ಬಂದು ತಿನ್ನದೊಡಗಿದ್ದು ಅಮ್ಮಿಣಿಗೆ ಗೊತ್ತೇ ಆಗಲಿಲ್ಲ. ಪಕ್ಕದ ಮನೆ  ಜಾನಕಿ ಬಂದು ಕೋಳಿಯನ್ನು ಸುಯ್ ಸುಯ್ ಎಂದು ಓಡಿಸುತ್ತಲೇ .. ಅಮ್ಮಿಣಿ  ನೀನು ಏನು ಯೋಚನೆ ಮಾಡ್ತಾ ಇದ್ದೀಯಾ … ಓಲೆ ಬೆಲ್ಲ ಅರ್ಧವೂ ಕೋಳಿ ತಿಂದಾಯಿತು ಎನ್ನುವಾಗಲೇ ಎಚ್ಚರಗೊಂಡು ಎದ್ದು ಬಂದಳು. ಇಬ್ಬರೂ ಮಣೆ ಹಾಕಿ ಕುಳಿತು ಮಾತಿಗೆ ತೊಡಗಿದರು. ಅಲ್ಲ ಜಾನಕಿ .. ಈ ಸುಂದ ಹೋಗಿ ಹೋಗಿ ಆ ಮುಂಡೆ ಲಚ್ಚಿಮಿಯ ಹತ್ತಿರ ಕೂರುತ್ತಾನಲ್ಲ .. ಇದನ್ನು ಹೇಗೆ ತಡೆಯುವುದು  ಎನ್ನುವ ಪ್ರಶ್ನೆಗೆ ಈ ಮೊದಲೇ ವಿಷಯ  ಗೊತ್ತಿದ್ದ ಜಾನಕಿ ಏನೂ ಉತ್ತರಿಸಲಿಲ್ಲ. ಲಚ್ಚಿಮಿ  ಏನೂ ಅಪರಿಚಿತೆಯಲ್ಲ . ಜಾನಕಿಗೆ ದೂರದ ಸಂಬಂದಿ ಕೂಡಾ ಹೌದು.  ಸುಂದ ಮತ್ತು ಲಚ್ಚಿಮಿಯ ನಡುವಿನ ಸಂಬಂಧ ಊರಲ್ಲಿ ಕೂಡಾ ಎಲ್ಲರಿಗೂ ಗೊತ್ತಿರೋ ವಿಷಯವೇ.. ಬೆಳ್ಳಂಬೆಳಿಗ್ಗೆ ತಾಳೆಗೆ ಏರಲೆಂದು ಸುಂದ ಕತ್ತಿ, ಕೊಡ ತೋಳಿಗೇರಿಸಿ ನಡೆದರೆ ವಾಪಸಾಗುವುದು ಸಂಜೆ ಆರರ ನಂತರವೇ.. ಮಧ್ಯಾಹ್ನದ ಊಟ ಕೂಡಾ ಅಲ್ಲಿಯೇ .. “ಅಮ್ಮಿಣಿ … ನಾನೊಂದು ವಿಷಯ ಹೇಳುತ್ತೇನೆ. ನಿನಗದು ಬೇಜಾರು ಆಗಬಹುದು ಆದರೆ ನಾಳೆಯಾದರೂ ನಿನಗೆ ತಿಳಿದೇ ತಿಳಿಯುತ್ತದೆ ಮಾತ್ರವಲ್ಲ ತಿಳಿದಿರಲೇ ಬೇಕು ” …  ತಾ ಕೂತಿದ್ದ ಮಣೆಯನ್ನು ಎಡಗೈಯಿಂದ  ಲಚ್ಚಿಮಿಯ ನೂಕಿ ಇನ್ನೂ ಹತ್ತಿರ ಕುಳಿತಳು ಜಾನಕಿ. ಅಮ್ಮಿಣಿಗೂ  ಕುತೂಹಲ … ಆಕೆ ಮೆತ್ತಗೆ ಕಿವಿಯಲ್ಲಿ .. “ಆ ಲಚ್ಚಿಮಿಗೆ ಈಗ ತಿಂಗಳು ಒಂಭತ್ತು ಅಂತೆ. ನಿನ್ನೆ ಸರ್ಕಾರಿ ಆಸ್ಪತ್ರೆಗೆ ಹೋಗಿದ್ದಳಂತೆ. ಈ ತಿಂಗಳ ಕೊನೆಗೆ ಹೆರಿಗೆಯ ತಾರೀಕು ಕೊಟ್ಟಿದ್ದಾರಂತೆ … “ ಅಮ್ಮಿಣಿಗೆ ದುಃಖ ಉಮ್ಮಳಿಸಿ ಬಂತು. ದಿನವೂ ರಾತ್ರಿ ಜಗಳ ಮಾಡುವುದೊಂದೇ ಬಂತು. ತನ್ನ ಯಾವ ಮಾತನ್ನೂ ಕೇಳಿಸಿಕೊಳ್ಳುವ ಗೋಜಿಗೂ ಹೋಗದ ನೀಚ ನನ್ನ ಸುಂದ ಎನ್ನುತ್ತಾ ಕಣ್ಣೀರು ಹಾಕಿದಳು. ಇಂದು ರಾತ್ರಿ ತೀರ್ಮಾನಕ್ಕೆ ಒಂದು ಬರಲೇ ಬೇಕು … ಒಂದೋ ನಾನು ಇಲ್ಲ ಅವಳು .. ಮಧ್ಯಾಹ್ನ ದ ಊಟವೂ ಹೊಟ್ಟೆಗೆ ಹತ್ತಲಿಲ್ಲ …. ಅಂಗಳದಲ್ಲೇ ತಾಳೆಬೆಲ್ಲ ಒಣಗಿಸುತ್ತಾ ಕೂತಿದ್ದಳು .  ಮುಸ್ಸಂಜೆಯ ಹೊತ್ತು ಸುಂದ ಅಂಗಳಕ್ಕೆ ಕಾಲಿಟ್ಟ .. ಸಾರಾಯಿ ವಾಸನೆ ಮೂಗಿಗೆ ಬಡಿಯುತ್ತಲೇ ಇತ್ತು. ಸುಂದನನ್ನು ಒಮ್ಮೆಲೇ ಪ್ರಶ್ನಿಸುವಷ್ಟು ಧೈರ್ಯ ಅಮ್ಮಿಣಿಗೆ ಇರಲಿಲ್ಲ. ಅಮ್ಮಿಣಿ .. ನಾಳೆ 250 ಬೆಲ್ಲ ಪೇಟೆಯ ನಾಯ್ಕರ ಅಂಗಡಿಗೆ ಬೇಕು.. ಕಟ್ಟ ಒಂದಕ್ಕೆ ಹತ್ತರಂತೆ 25 ಕಟ್ಟ ಮಾಡಿಡು. 500 ರೂಪಾಯಿ ಕೊಟ್ಟಿದ್ದಾನೆ. ಉಳಿದದ್ದು ಅಂಗಡಿಯಲ್ಲಿ ಕೊಡುತ್ತಾನೆ. ಈ ಐನೂರು ನೀನೇ ಇಟ್ಟುಕೋ ನನ್ನಲ್ಲಿ ಇಟ್ಟರೆ ಖರ್ಚಾಗಬಹುದು ಎನ್ನುತ್ತಾ ಐನೂರರ ಗರಿ ನೋಟು ಅಮ್ಮಿಣಿಯ ಕೈಗಿಟ್ಟ … ಅಮ್ಮಿಣಿಯ ಕೋಪ ಒಮ್ಮೆಲೇ ಇಳಿಯಿತು. ಇಂದು ಕೇಳುವುದು ಬೇಡ ಎಂದು ತೀರ್ಮಾನಿಸಿ ರಾತ್ರಿಯ ಊಟಕ್ಕೆ ತಯಾರಿ ಮಾಡಲು ಅಡುಗೆ ಮನೆಯತ್ತ ಹೊರಟಳು. ಅಮ್ಮಿಣಿಯ ಚಿಂತೆ ಇನ್ನೂ ದೂರವಾಗಲಿಲ್ಲ. ರಾತ್ರಿ ಊಟವೂ ಆಯಿತು. ಮಕ್ಕಳಿಬ್ಬರೂ ಉಂಡು ಮಲಗಿಯೂ ಆಯಿತು… ಅವನಾಗಿ ಕರೆಯದೆ ಎಂದೂ ಅಮ್ಮಿಣಿ ಆತನ ಬಳಿ ಹೋದವಳಲ್ಲ. ಇಂದು ಸುಂದ ಕರೆಯದಿದ್ದರೂ ಮೆಲ್ಲನೆ ಆತನ ಬಳಿ ಮಲಗಿದಳು ಅಮ್ಮಿಣಿ. ಆತ ಗೊರಕೆ ಹೊಡೆಯುತ್ತಲಿದ್ದ. ಹೇಗೆ ಆರಂಭಿಸುವುದು ಎಂದು ತಿಳಿಯದೆ ಮೆತ್ತಗೆ ಆತನ ಎದೆಯನ್ನು ಸವರತೊಡಗಿದಳು. ಥಟ್ಟನೆ ಎದ್ದು ಕೂತ ಸುಂದ… ಆಹಾ.. ಇವತ್ತೇನು ವಿಷ್ಯಾ… ಸೂರ್ಯ ಪಶ್ಚಿಮದಲ್ಲಿ ಮೂಡಿದ್ದಾನೋ.. ಅಥವಾ ಐನೂರಕ್ಕೆ ಋಣವೋ… ಎಂದು ಮೆತ್ತಗೆ ನಕ್ಕ. “ಅಲ್ಲ ಸುಂದ .. ನನಗೂ ತಾಳೆ ಮರ ಏರುವುದು ಗೊತ್ತು.. ನಾಳೆಯಿಂದ ನಾನೂ ನಿನ್ನೊಂದಿಗೆ ಬರಲಾ …” ಕೂತಿದ್ದ ಸುಂದ ಒಮ್ಮೆಲೇ ನಿಂತು… ನೀ ನನ್ನೊಟ್ಟಿಗೆ ಬಂದ್ರೆ ಮಕ್ಕಳನ್ನು ನಿನ್ನಪ್ಪ ಬಂದು ನೋಡ್ತಾನಾ ಎಂದು ಗುಡುಗಿದ. ಅಮ್ಮಿಣಿ ಶಾಂತವಾಗಿ… “ಮಕ್ಕಳನ್ನು ಸಂಜೆ ತನಕ ನೋಡಿಕೊಳ್ಳುವೆ ಎಂದು ಅಮ್ಮ ಒಪ್ಪಿದ್ದಾಳೆ,,”. ಎಂದಾಗ ಕೋಪ ಇನ್ನೂ ನೆತ್ತಿಗೇರಿತ್ತು. ಅಮ್ಮಿಣಿ ಯನ್ನು ತಳ್ಳಿ ಹಾಕಿ ಚಾವಡಿಯಲ್ಲಿ ಕೂತು ಬೀಡಿಗೆ ಬೆಂಕಿ ಹಚ್ಚಿ ಬಯ್ಯುತ್ತಾ ಕುಳಿತ.. ಅಮ್ಮಿಣಿ ಒಬ್ಬಳೇ ಮಕ್ಕಳ ಬಳಿ ಹೋಗಿ ಮಲಗಿ ಅಳುತ್ತಲೇ ನಿದ್ದೆಗೆ ಜಾರಿದಳು. ಬೆಳಗ್ಗೆ ಸುಂದ ಚಾವಡಿಯಲ್ಲೇ ಮಲಗಿದ್ದ. ಆತನ ಕೋಪ ಇಳಿದಿತ್ತು. ಬೆಳಗ್ಗಿನ ತಿಂಡಿ ತಿನ್ನುತ್ತಲೇ ಮಕ್ಕಳನ್ನು ತನ್ನ ಹತ್ತಿರ ಕುಳ್ಳಿರಿಸಿ ಅವರಿಗೂ ತಿನ್ನಿಸುತ್ತಾ … ಅಮ್ಮಿಣಿ ಎಂದು ಪ್ರೀತಿಯಿಂದ ಕರೆದ. ಅಮ್ಮಿಣಿಗೂ ಆಶ್ಚರ್ಯ.. ಎಂದೂ ಹೀಗೆ ಪ್ರೀತಿಯಿಂದ ಕರೆದವನೋ ಮಾತನಾಡಿಸಿದವನೋ ಅಲ್ಲ. ಸಂಜೆಯಾದರೆ ಬೈಗುಳ. ಮಕ್ಕಳೊಡನೆ ಮಾತ್ರ ಮಾತುಕತೆ.. ಅಮ್ಮಿಣಿ ಒಲೆಗೆ ನಾಲ್ಕು ಸೌದೆ ತುರುಕಿಸಿ ಸೆರಗನ್ನು ಸರಿಮಾಡುತ್ತಾ… ” ಹಾ ಬಂದೆ”  ಎಂದು ಆತನ ಬಳಿ ಹೋಗಿ ಕುಳಿತಳು. ಸುಂದ ಏನೋ ಖುಷಿಯಲ್ಲಿದ್ದ. “ಅಮ್ಮಿಣಿ…  ನೋಡು ಕುಟ್ಟಿಗೌಡ ತನ್ನ ಎಂಟು ತಾಳೆಗಳನ್ನು ನನಗೆ ಕೆತ್ತಲು ವಹಿಸಿಕೊಟ್ಟಿದ್ದಾನೆ. ಬರುವ ವಾರದಿಂದ ಕೆಲಸ ಜಾಸ್ತಿ ಇರಬಹುದು. ಎಲ್ಲಾ ತಾಳೆಗೂ ಇವತ್ತಿಂದಲೇ ಬಿದಿರ ಏಣಿ ಕಟ್ಟಲು ತೊಡಗುತ್ತೇನೆ. ಪೇಟೆಯಲ್ಲೂ ತಾಳೆ ಬೆಲ್ಲಕ್ಕೆ ಡಿಮಾಂಡು ಈಗೀಗ ಜಾಸ್ತಿ ಆಗುತ್ತಿದೆ. ಬರುವ ವಾರದಿಂದ ನಿನ್ನನ್ನೂ ಕರಕೊಂಡು ಹೋಗುತ್ತೇನೆ..”. ಅಮ್ಮಿಣಿ ನಕ್ಕಳು… ಅವಳ ಉತ್ತರಕ್ಕೂ ಕಾಯದೆ ಚಾ ಹೀರುತ್ತಾ ಸುಂದ ಹೊರಡಲು ನಿಂತ. ಲೋಟ ಖಾಲಿಯಾಗುತ್ತಲೇ ಗೋಡೆಯಲ್ಲಿ ತೂಗು ಹಾಕಿದ್ದ ಕತ್ತಿ, ಕೊಡವನ್ನು ಎತ್ತಿ ಹೆಗಲಿಗೇರಿಸಿ ಸುಂದ ಅಂಗಳ ದಾಟಿ ಹೊರಟೇ ಬಿಟ್ಟ. ಅಮ್ಮಿಣಿ ಚಾವಡಿಯಲ್ಲಿ ಕೂತು ಆತನ ನಡಿಗೆಯನ್ನೇ ನೋಡುತ್ತಾ ಕುಳಿತಳು. ದಿನಗಳುರುಳಿತು… ಸುಂದನೊಂದಿಗೆ ಅಮ್ಮಿಣಿಯೂ  ಕೆಲಸಕ್ಕೆ ಹೋಗಲು ಶುರುಮಾಡಿದ್ದಳು. ಹೋಗುವ ದಾರಿಯಲ್ಲೇ ಲಚ್ಚಿಮಿಯ ಮನೆ.  ಅಮ್ಮಿಣಿಯ ಕಣ್ಣು ಆ ಕಡೆ ನೋಡುತ್ತಲೇ ಇತ್ತು. ಗುಡಿಸಲಿಗೆ ಬೀಗ ಜಡಿದಿತ್ತು. ಸಂಜೆಯ ಒಳಗಡೆ ಇಬ್ಬರೂ ಜೊತೆಯಾಗಿ ವಾಪಸ್ಸಾಗುತ್ತಿದ್ದರು. ಸಂಜೆ ಬಂದು ಬಾಣಲೆಗೆ ಹಾಕಿ ಕಳ್ಳು ಬೇಯಿಸತೊಡಗಿದರೆ ಮಧ್ಯರಾತ್ರಿಯ ವರೆಗೂ ಮುಂದುವರಿಯುತ್ತಿತ್ತು. ಅಮ್ಮ ಬಂದು ಸಹಾಯಕ್ಕೆ ನಿಂತಿದ್ದ ಕಾರಣ ಬೆಲ್ಲ ಒಣಗಿಸುವ ಮತ್ತು ಮಕ್ಕಳನ್ನು ನೋಡುವ ಜವಾಬ್ದಾರಿ ಆಕೆಯೇ ವಹಿಸಿಕೊಂಡಂತಾಗಿತ್ತು. ಅದೊಂದು ದಿನ ಬೆಳಿಗ್ಗೆ ಹೊರಟಾಗ ಲಚ್ಚಿಮಿಯ ಗುಡಿಸಲು ತೆರೆದಿತ್ತು. ಮನೆಯಲ್ಲಿ ಪುಟ್ಟ ಮಗುವಿನ ಅಳುವೂ ಕೇಳಿಸುತ್ತಿತ್ತು. ಸುಂದ ಒಂದು ನಿಮಿಷ ಅಲ್ಲೇ ನಿಂತ. ಅಮ್ಮಿಣಿ ಕೋಪದಿಂದ ನಡೀರಿ ಮುಂದೆ ಎನ್ನುತ್ತಾ ದೂಡಿದಳು. ಸುಂದ ಮನಸ್ಸಿಲ್ಲದ ಮನಸ್ಸಿನಿಂದ ಮುಂದೆ ನಡೆಯುತ್ತಿದ್ದ. ಸುಂದ ಮಂಕಾಗಿದ್ದ. ನಾಲ್ಕು ತಾಳೆಮರಕ್ಕೆ ಏರಿದವನು ಸುಸ್ತಾಗಿ ಕೆಳಗೆ ಮಲಗಿದ್ದ. ನಂತರ ಈಗ ಬರುತ್ತೇನೆ ಎಂದು ಹೋದವ ಒಂದು ಗಂಟೆ ಕಾದರೂ ವಾಪಸ್ಸಾಗಲಿಲ್ಲ. ಅಮ್ಮಿಣಿಯ ಕೋಪ ನೆತ್ತಿಗೇರಿತ್ತು… ನೇರವಾಗಿ ಲಚ್ಚಿಮಿಯ ಮನೆಗೆ ಹೆಜ್ಜೆ ಹಾಕಿದಳು. ಸುಂದ ಅದೇ ಗುಡಿಸಲಲ್ಲಿದ್ದ… !!!. ಒಂದುವಾರದ ಹಾಲುಗಲ್ಲದ  ಮಗು ತೊಟ್ಟಿಲಲ್ಲಿ ನಿದ್ರಿಸುತ್ತಿತ್ತು. ಬಾಣಂತಿ ಲಚ್ಚಿಮಿ ಕೂತಿದ್ದಳು. ಅಮ್ಮಿಣಿ ಜೋರಾಗಿ ಕಿರುಚಲು ಪ್ರಾರಂಭಿಸಿದಳು. ಮುಂಡೆ.. ನಿನಗೆ ಇಟ್ಟುಕೊಳ್ಳಲು ನನ್ನ ಗಂಡ ಮಾತ್ರ ಸಿಕ್ಕಿದ್ದಾ… ಹಿಡಿಶಾಪ ಹಾಕುತ್ತಾ ಸುಂದನ ಕೈ ಹಿಡಿದು ಎಳೆಯುತ್ತಾ ಕರೆತಂದಳು. ಲಚ್ಚಿಮಿ ಮಾತನಾಡಲಿಲ್ಲ. ಆದರೆ ಅಳುತ್ತಲೇ ಇದ್ದಳು. ಬಾಣಂತಿ ಹೆಣ್ಣು.. ತನ್ನವರೆಂದು ಆಕೆಗೆ ಯಾರೂ ಇರಲಿಲ್ಲ. ಸುಂದನ ಸಾರಾಯಿ ಹುಚ್ಚು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇತ್ತು. ಅಮ್ಮಿಣಿಗೆ ಈಗ ಇದೊಂದು ಚಿಂತೆ ಬೇರೆ. ಜೊತೆಯಾಗಿ ಹೋಗುವುದೇನೋ ಸರಿ ಆದರೆ ಮಾತಿಲ್ಲ. ಎಲ್ಲವೂ ಕಳೆದುಕೊಂಡವನಂತೆ ಆಲೋಚನೆ ಮಾಡುತ್ತಲೇ ಇರುತ್ತಿದ್ದ. ಒಂದು ಬೆಳಿಗ್ಗೆ ಸುಂದ ಏಳಲೇ ಇಲ್ಲ… !. ಮಾತಿಲ್ಲ. ಎದ್ದೇಳಲೂ ಆಗುತ್ತಿಲ್ಲ.. ಬಲಗೈ ಮತ್ತು ಬಲಗಾಲು ಸ್ವಾಧೀನವನ್ನೂ ಕಳೆದುಕೊಂಡಿತ್ತು.. !. ವೈದ್ಯರು ಬಂದು ಪರೀಕ್ಷೆ ಮಾಡಿಯಾಯಿತು. ದಿನ ಮೂರಾಯಿತು…. ಸುಂದ ಏನನ್ನೋ ಹೇಳಲು ಪ್ರಯತ್ನಿಸುತ್ತಿದ್ದ ಎಂದು ಆತನ ಕಣ್ಣುಸನ್ನೆಯಿಂದ ಅರ್ಥವಾಗುತ್ತಿತ್ತು. ಗಂಡ ಮಲಗಿದ್ದಾನೆ.. ತಾನೂ ಮನೆಯಲ್ಲಿ ಕೂತರೆ ಜೀವನ ರಥ ಸಾಗುವುದಾದರೂ ಹೇಗೆ.. ? ಇಂದಿಗೆ ದಿನಗಳು ನಾಲ್ಕಾಯಿತು… ಅಮ್ಮಿಣಿ ನೇರ ತಾಳೆ ಮರದತ್ತ ಹೊರಟಳು. ದಾರಿಯಲ್ಲಿ ನಡೆವಾಗ ಲಚ್ಚಿಮಿಯ ಮನೆಯತ್ತ ನೋಡಲು ಮರೆಯಲಿಲ್ಲ. ಬಾಣಂತಿ ಹೆಣ್ಣು ಅಂಗಳದಲ್ಲಿ ಭತ್ತ ಕುಟ್ಟುತ್ತಲಿದ್ದಳು. ಅಮ್ಮಿಣಿ ಕಂಡೂ ಕಾಣದವಳಂತೆ ಮುಂದೆ ನಡೆದಳು. ಮುಸ್ಸಂಜೆಯಾಯಿತು. ಪೇಟೆಯಿಂದ ಸಾಮಾನು ಮತ್ತು ಒಂದಿಷ್ಟು ಬಟ್ಟೆ ಬರೆಗಳನ್ನೂ ಖರೀದಿಸಿ ಮನೆಗೆ ವಾಪಸ್ಸಾದಳು. ಅಮ್ಮನಲ್ಲಿ ನಾಟಿಕೋಳಿಯೊಂದನ್ನು ಸಾರುಮಾಡಲು ತಿಳಿಸಿ ಹೋಗಲು ಮರೆಯಲಿಲ್ಲ. ಸುಂದ ಅಸಹಾಯಕನಾಗಿ ಅಮ್ಮಿಣಿಯನ್ನೇ ನೋಡುತ್ತಲಿದ್ದ. ಮುಸ್ಸಂಜೆಯಾಯಿತು. ಅಮ್ಮಿಣಿ ಸುಂದನ ಬಳಿ ಬಂದು ಚಿಮಿಣಿ ದೀಪದ ಬೆಳಕು ಏರಿಸುತ್ತಾ… “ಸುಂದ… ನೋಡು ಯಾರು ಬಂದಿದ್ದಾರೆ…,,,” ಎಂದಳು. ಇವರೆಲ್ಲಾ ಇನ್ನು ನಮ್ಮೊಂದಿಗೇ ಇರುತ್ತಾರೆ ಎನ್ನುತ್ತಾ ಹಾಲುಕಂದನನ್ನು ಎದೆಗಪ್ಪಿ ಮುದ್ದಿಸುತ್ತಾ ಸುಂದನ ಮಡಿಲಲ್ಲಿಟ್ಟು ನಗತೊಡಗಿದಳು. ನಗುವಿನ ಹಿಂದೆ ನೂರಾರು ನೋವುಗಳಿತ್ತು. ಸುಂದನ ಕಣ್ಣಿಂದ ಹರಿವ ನೀರು ಲಚ್ಚಿಮಿಗೂ ಸಮಾಧಾನ ಹೇಳುವಂತಿತ್ತು. ********

ಅಮ್ಮಿಣಿ Read Post »

You cannot copy content of this page

Scroll to Top