ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕೊಡುವುದಾದರೂ ಯಾರಿಗೆ ?

ಚಿತ್ರ ಮತ್ತು ಕವಿತೆ : ವಿಜಯಶ್ರೀ ಹಾಲಾಡಿ. ಹೌದುಈ ಪ್ರೀತಿಯನ್ನುಮೊಗೆಮೊಗೆದುಕೊಡುವುದಾದರೂ ಯಾರಿಗೆ ? ನೇರಳೆಮರಕ್ಕೆ ಅಳಿಲಿಗೆಬೆಚ್ಚನೆ ಗೂಡಿನ ಹಕ್ಕಿಗೆ ? ಹೆಣ್ತನದ ಪರಿಧಿಗೆ ಎಂದೂ ದಕ್ಕದಮುಖ –ಮುಖವಾಡಗಳು …ರಾತ್ರಿ -ಹಗಲುಗಳನ್ನುಗೆಜ್ಜೆಕಾಲಿನಲ್ಲಿ ನೋಯಿಸಲೆ …ಯಾತನೆಯನ್ನು ನುಂಗುತ್ತಿರುವೆಸಂಜೆಯ ಏಕಾಂತಗಳಲ್ಲಿಹೆಪ್ಪುಗಟ್ಟಿದ ಇರುಳುಗಳಲ್ಲಿ .. ಬೊಗಸೆಯೊಡ್ಡಿದ್ದೇನೆಮಂಡಿಯೂರಿದ್ದೇನೆಹಟಮಾರಿ ಕಡಲಾಗಿದ್ದೇನೆ..ತರ್ಕಕ್ಕೆ ನಿಲುಕದ ಗಳಿಗೆ-ಗಳಲ್ಲಿ ಒಂಟಿಹೂವಂತೆನಿಂತುಬಿಟ್ಟಿದ್ದೇನೆ .. ಲೆಕ್ಕವಿಟ್ಟಿಲ್ಲ ಕೋಗಿಲೆಹಾಡಿದ ಹಾಡುಗಳನ್ನು… ಉದುರಿಬಿದ್ದ ಗರಿಗಳನ್ನುಮತ್ತೆ ಹುಟ್ಟಿಸಿಕೊಳ್ಳಲುಸಾಧ್ಯವಾಗುವುದಾದರೆಪ್ರೀತಿಯಿಂದ ಆರ್ತಳಾಗಿದ್ದೇನೆ.

ಕೊಡುವುದಾದರೂ ಯಾರಿಗೆ ? Read Post »

ಕಾವ್ಯಯಾನ

ನಾವೀಗ ಹೊರಟಿದ್ದೇವೆ

ಕವಿತೆ ಶೀಲಾ ಭಂಡಾರ್ಕರ್ ನಾವೀಗ ಹೊರಟಿದ್ದೇವೆಒಂದೊಮ್ಮೆ ನಮ್ಮದಾಗಿದ್ದನಮ್ಮ ಊರಿಗೆ. ಯಾರೊಬ್ಬರಾದರೂತಡೆಯುವವರಿಲ್ಲವೇ!! ನಮ್ಮನ್ನುಹೋಗಬೇಡಿರೆಂದು ಕೈ ಹಿಡಿದು.ಈ ಪಟ್ಟಣ ನಿಮ್ಮದೂ ಕೂಡ ಎಂದು. ಇಟ್ಟಿಗೆ ಮರಳು ಹೊತ್ತ ತೋಳುಗಳುಸುತ್ತಿಗೆ ಉಳಿ ಹಿಡಿದ ಕೈಗಳುಗಂಟು ಮೂಟೆಗಳನ್ನುಹೊತ್ತು ಕೊಂಡು ಹೊರಟಿವೆ,ಭಾರವಾದ ಮನಸ್ಸನ್ನುಎದೆಯೊಳಗೆ ಮುಚ್ಚಿಟ್ಟು. ಯಾರಿಗೂ ನೆನಪಾಗಲಿಲ್ಲವೇ..ತಮ್ಮ ಮನೆಗಳಿಗೆಗಾರೆ ಮೆತ್ತಿದ, ಬಣ್ಣ ಹಚ್ಚಿದಕೈಗಳ ಹಿಂದೆ ಒಂದು ಉಸಿರುಹೊತ್ತ ಜೀವವಿದೆ.ನಮಗಾಗಿ ದುಡಿದ ಚೇತನವಿದೆ.ಅನಿಸಲಿಲ್ಲವೇ ಒಮ್ಮೆಯೂ. ಕಾಲೆಳೆದು ನಡೆದಿದ್ದೇವೆ.ದೇಹಕ್ಕಿಂತ ಭಾರವಾದಉಸಿರನ್ನು ಹೊತ್ತುಕೊಂಡು.ಊರು ತಲುಪುವ ಆಸೆಯಿಂದ.ನಮ್ಮದೇನಾದರೂ ಜಾಗ,ಒಂದಾದರೂ ಕುರುಹು..ಅಲ್ಲಿಯಾದರೂ..ಉಳಿದಿರಬಹುದೆಂಬ ನಿರೀಕ್ಷೆಯಿಂದ. ಹೊರಟಿದ್ದೇವೆ ಒಂದೊಮ್ಮೆನಮ್ಮದಾಗಿದ್ದ ನಮ್ಮ ಊರಿಗೆ. *******************

ನಾವೀಗ ಹೊರಟಿದ್ದೇವೆ Read Post »

ಕಾವ್ಯಯಾನ

ಮಗಳು ಹುಟ್ಟಿದ್ದಾಳೆ

ಕವಿತೆ ನಿನ್ನೆ ಯಾವನೋ ಪಾಪಿ ತ್ರಿಪುರದಲ್ಲಿ ಹೆಣ್ಣು ಹುಟ್ಟಿದೆ ಅಂತ ತಾನು ಆತ್ಮಹತ್ಯೆ ಮಾಡಿಕೊಂಡನಂತೆ ಮತ್ತು ಅವನ ಮಡದಿ ಹೃದಯಾಘಾತವಾಗಿ ಸತ್ತಳು.ಅದಕ್ಕೆ ಇದನ್ನು ನಿಮಗೆ ಒಪ್ಪಿಸಬೇಕು ಅನಿಸಿತು. ಪ್ಯಾರಿಸುತ ಮಗಳು ಹುಟ್ಟಿದ್ದಾಳೆ…ಪದಗಳಿಗೆ ಸಿಗದ ದನಿಯೊಂದುಕಿವಿಗೆ ಬಿದ್ದು ನನ್ನ ಮನವು ಹಿಗ್ಗಿದೆಮುದ್ದು ಮುದ್ದು ಮುಖವ ಹೊತ್ತುಬೆಳಗು ಮುಂಜಾನೆ ಬೆಳಕು ಚಿಮ್ಮಿಸಿಬೆಚ್ಚನೆ ಹಾಸಿಗೆಯಲ್ಲಿ ಗೊಂಬೆಯಂತೆ ಮಲಗಿದ್ದಾಳೆಅವಳ ಮುಷ್ಟಿಯಲ್ಲಿ ಅನ್ನದ,ಆಯುಷ್ಯದ,ವಿದ್ಯಾರೇಖೆಗಳುಅಡ್ಡವಾಗಿ ನದಿಯು ಹರಿಯುವ ದಾರಿಯಂತೆಗುರುತು ಮಾಡಿಕೊಂಡಿವೆಬೆಳ್ಳಿ ಮುಖದಲ್ಲಿ ಹೊಮ್ಮುವ ಪ್ರಕಾಶತೆಗೆಸುತ್ತಲೂ ಎಲ್ಲರಿಗೂ ನಗುವು ಹಂಚಿ ಹೋಗಿದೆಅವಳು ಗೊಂಬೆ,ಹೆಮ್ಮರದ ಕೊಂಬೆ ಮಗಳು ಹುಟ್ಟಿದ್ದಾಳೆ….ನನಗೂ ನನ್ನವಳಿಗೂ ಅವಳೇ ಅಧಿನಾಯಕಿಯಿನ್ನುತಡವಾಗಿ ಬರಲಾರೆ,ಸುಳ್ಳೆಂದು ಹೇಳಲಾರೆಅವಳಿರುವ ಭಯಕ್ಕೀಗ ಬಲುಬೇಗ ನಾ ಬರುವೆಅಂಬೆಗಾಲು ಬಯಸಿದ ನಮ್ಮನೆ ಅಂಗಳವೀಗಸಂತೋಷ ತುಂಬಿಕೊಂಡಿದೆಮಿತಿಯು ನಿನಗಿಲ್ಲ ಮಗಳೇ,ಭೀತಿಯ ತರಿಸಲ್ಲಚುಕ್ಕಿ,ಬೆಳದಿಂಗಳು,ಚಂದ್ರರೆಲ್ಲರೂ ರಾತ್ರಿಯಲ್ಲಿ ನಿನ್ನ ಸ್ನೇಹಿತೆಯರುಕೈ ಮಾಡಿ ನೀ ಕರೆದರೆ ತಡಬಡಿಸಿ ಬರುವರುನಾ ನಿನ್ನ ಆನೆಯುನೀ ನನ್ನ ಅಂಬಾರಿನಿನ್ನ ಹೊತ್ತು ಮೆರೆಸುವೆನುನೀನಾಗು ಜಗವಾಳು ದೊರೆಸಾನಿ ************

ಮಗಳು ಹುಟ್ಟಿದ್ದಾಳೆ Read Post »

ಕಾವ್ಯಯಾನ

ಸಂಜೆಯಾಗುತಿದೆ

ಕವಿತೆ ಶಾಂತಲಾ ಮಧು ಸಂಜೆಯಾಗುತಿದೆಆರಾಗಲಿಲ್ಲ ಸಂಜೆಯಾಗುತಿದೆಬೆಳದಿಂಗಳಾಸೆ ಚಂದ್ರನಿಗೆಕಸ್ತೂರಿ ತಿಲಕವನಿಡುವೆನೆನುತಹಾಡಿ ಓಡಿದರೆ,ಸಂಜೆಯಾಗುತಿದೆ ಬೆಟ್ಟಗಳ ತುದಿ ಏರಿಮೋಡದಲಿ ಈಜಾಡಿ..ಹಕ್ಕಿ ಜೊತೆ ಚಿಲಿಪಿಲಿಮಾತಾಡ ಹವಣಿಸಲುಹಾರಿ ಹೋಯಿತು ಹಕ್ಕಿಸಂಜೆಯಾಗುತಿದೆ ಮೊಟ್ಟೆ ಮರಿಗಳ ಸಲಹಿರೆಕ್ಕೆ ಪುಕ್ಕಗಳು ಬಲಿತುಹಾರ ಬಯಸಲು ಮುನ್ನಸಂಜೆಯಾಗುತಿದೆ ಹುಲ್ಲು ಗರಿಕೆಯ ತಂದುಎಣಿಸಿ ಪೋಣಿಸಿ ಗೂಡು ಕಟ್ಟಿಮೆರೆಯುವ ತವಕಸಂಜೆಯಾಗುತಿದೆ ಚಲಿಸುತಿದೆ ಚಿತ್ರವದುಮನಃ ಪಟಲ ಕೆದಕುತಿದೆಕೆಂಪನೆಯ ಆಗಸದಿಮರೆಯಾಗುತಿಹನವನುಸಂಜೆಯಾಗುತಿದೆ *****

ಸಂಜೆಯಾಗುತಿದೆ Read Post »

ಅನುವಾದ

ಊರುಗೋಲು

ಅನುವಾದಿತ ಕವಿತೆ ಮೂಲ: ಬರ್ಟೋಲ್ಡ್ ಬ್ರೆಕ್ಟ್ ಕನ್ನಡಕ್ಕೆ: ವಿ.ಗಣೇಶ್ ಹತ್ತು ವರುಷಗಳ ಕಾಲ ಹೆಜ್ಜೆಯಿಡಲಾರದಲೆ ವೈದ್ಯನ ಸಲಹೆ ಪಡೆಯಲಂದು ನಾ ಬಂದೆ ‘ನಿಮಗೆ ಊರುಗೋಲೇಕೆ?’ ಎಂದವನು ಕೇಳಲು ನಾ ಹೆಳವ ಎನುತ ವಾದಿಸಿದೆನು. ಮುಗುಳು ನಗೆ ಸೂಸುತ ಆ ಹಿರಿಯ ವೈದ್ಯನು ‘ಮರಳಿ ಯತ್ನವ ಮಾಡು, ಮರಳಿ ಯತ್ನವ ಮಾಡು, ಊರುಗೋಲಿಂದಲೆ ನೀ ಹೆಳವನಾಗಿರುವೆ ತೆವಳುತ್ತ ತೆವಳುತ್ತ ನಡೆ ಮುಂದೆ’ ಎಂದ. ನನ್ನ ಪ್ರಿಯ ಸಾಧನವ ಕಸಿಯುತ್ತಲವನು ಸೈತಾನ ನೋಟವನು ಬೀರುತ್ತಲದರೆಡೆಗೆ ಆ ಪ್ರಿಯ ಸಾಧನವ ಮೆಟ್ಟಿ ತುಳಿಯುತಲಿ ಉರಿಯುತಿಹ ಬೆಂಕಿಗೆ ಎಸೆದು ಬಿಟ್ಟ ಪೂರ್ಣ ಗುಣಮುಖನಾಗಿ ನಡೆಯುತಿಹೆನಿಂದು ನಗುವಿನಿಂದಲೆ ನಾ ಗುಣವ ಪಡೆದಿರುವೆ ಕೆಲವೊಮ್ಮೆ ಕೋಲುಗಳ ನಾ ಕಂಡರೀಗಲೂ ಹೆಳವನಾ ರೀತಿಯಲೇ ನಡೆಯುತಿಹೆನು ************************************ Crutches By Burtlact Brect

ಊರುಗೋಲು Read Post »

ಕಥಾಗುಚ್ಛ

ಕಾದ್ರಿಯಾಕ ಮತ್ತು ನಾಡ ದೋಣಿ

ಕಿರು ಕಥೆ ಕೆ.ಎ. ಎಂ. ಅನ್ಸಾರಿ ಪಕ್ಕದ  ಮಸೀದಿಯ ಬಾಂಗು(ಅಜಾನ್) ಕೇಳಿದಾಗ ಎದ್ದೇಳುವ ಕಾದ್ರಿಯಾಕನ ದಿನಚರಿ ಮಗ್ರಿಬ್ (ಮುಸ್ಸಂಜೆ) ವರೆಗೂ ಮುಂದುವರಿಯುತ್ತಿತ್ತು. ಬೆಳಗ್ಗೆ ಎದ್ದಕೂಡಲೇ ದೋಣಿಯ ಹತ್ತಿರ ಹೋಗಿ ದೋಣಿಯ ಸುತ್ತ ಒಂದು ಪ್ರದಕ್ಷಿಣೆ ಹಾಕಿ ಅದರ ಪ್ರತಿ  ಭಾಗಕ್ಕೆ ಒಂದು ಚಿಕ್ಕ ಏಟು. ನಂತರ ದೋಣಿಯ ಒಳಗಡೆ  ಕುಳಿತುಕೊಳ್ಳುವ ಆಸನದ ಪರಿಶೀಲನೆ… ಎಲ್ಲೂ ಹಲಗೆ ಅಲುಗಾಡುತ್ತಿಲ್ಲ… ಎಂಬುದನ್ನು ಖಾತ್ರಿಪಡಿಸುವಿಕೆ. ನಂತರ ಕಂಗಿನ ಹಾಳೆಯಿಂದ ಮಾಡಿದ ಚಿಳ್ಳಿ (ನೀರೆತ್ತಲು ಮಾಡಿದ ದೇಸಿ ಪರಿಕರ)ಯಿಂದ ದೋಣಿಯೊಳಗಿನ ನೀರನ್ನು ಹೊರಚೆಲ್ಲುವುದು. ದೋಣಿಗೆ ಸುಮಾರು ಇಪ್ಪತ್ತು-ಮೂವತ್ತು ವರುಷದ ಚರಿತ್ರೆಯಿದೆ. ಅಷ್ಟೂ ಹಳೆಯದಾದ ಚಿಕ್ಕ ನಾಡ ದೋಣಿ. ಅಲ್ಲಲ್ಲಿ ತೂತಾಗಿದ್ದರೂ ಡಾಂಬರು ಹಾಕಿ ಪ್ಯಾಚ್ ವರ್ಕ್ ನಡೆಸಲು ಕಾದ್ರಿಯಾಕ ಮರೆಯುತ್ತಿರಲಿಲ್ಲ. ಹೊಳೆಯ ಆ ಬದಿಯಿಂದ ಕೂಯ್ ಎಂಬ ದನಿಯೊಂದು ಕೇಳಿದರೆ ಸಾಕು.. ಈ ದಡದಿಂದ ಕೂಯ್ ಕೂಯ್ ಎಂದು ಪ್ರತಿದ್ವನಿ ಕೊಟ್ಟು ಹುಟ್ಟು (ತುಡುವು) ಹಾಕುತ್ತಾ ಆ ದಡಕ್ಕೆ ಯಾತ್ರೆ. ಈ ದಡದಿಂದ ಆ ದಡಕ್ಕೆ ಮೈಲಿಯ ದೂರವೇನೂ ಇಲ್ಲ. ಐದು ನಿಮಿಷದ ದಾರಿ. ಅವರ ಭಾಷೆಯಲ್ಲಿ ಹೇಳುವುದಾದರೆ ಒಂದು ಬೀಡಿ ದೂರ. ಅಂದ್ರೆ ಹುಟ್ಟು ಹಾಕುವಾಗ ಬೀಡಿ ಹೊತ್ತಿಸಿ ಬಾಯಲಿಟ್ಟರೆ ನಾಲ್ಕು ಸಲ ಹೊಗೆ ಬಿಟ್ಟಾಗ ಆ ದಡದಲ್ಲಿ ಹಾಜರ್. ಎಲ್ಲರ ಹಾಗೆ ಕಾದ್ರಿಯಾಕನಿಗೂ ಒಂದು ಕನಸಿತ್ತು. ಒಂದು ಹೊಸ ದೋಣಿ ಖರೀದಿಸಬೇಕು. ಅದೇನೂ ಈ ಜನ್ಮದಲ್ಲಿ ಸಾಧ್ಯವಿಲ್ಲ ಎಂದು ತನಗೇ ಗೊತ್ತಿತ್ತು. ಹೊಳೆದಾಟಲು ಊರವರು ಕೊಡುತ್ತಿದ್ದ  ಒಂದೋ ಎರಡೋ ರೂಪಾಯಿಗಳು ಸೇರಿದರೆ ಐವತ್ತೋ ನೂರೋ ಆಗುತ್ತಿತ್ತು ಅಷ್ಟೇ… ಅದರಿಂದ ಆತನ ದಿನದ ಖರ್ಚಿಗೇ ಸಾಕಾಗುತ್ತಿರಲಿಲ್ಲ. ಖಾದ್ರಿಯಾಕನಿಗೆ ವಯಸ್ಸಾಗುತ್ತಾ ಬಂತು. ಗಂಡು ಮಕ್ಕಳೆಲ್ಲಾ ಪೇಟೆಗೆ ಕೆಲಸಕ್ಕೆ ಹೋಗಲು ಶುರುಮಾಡಿದರು. ದೋಣಿಗೆ ಹುಟ್ಟು ಹಾಕಿ ಹಾಕಿ ಆತನ ರಟ್ಟೆ ಬಲವೂ ಕ್ಷೀಣಿಸುತ್ತಾ ಬಂದಿತ್ತು. ಈ ನಡುವೆ ಪೇಟೆಗೆ ಹೋಗಲು ಇನ್ನೊಂದು ಭಾಗದಿಂದ ಸೇತುವೆಯೂ ನಿರ್ಮಾಣವಾಯಿತು. ಅದರೊಂದಿಗೆ ಪ್ರತಿ ಮನೆಯಲ್ಲೂ ದ್ವಿಚಕ್ರ ವಾಹನದ ಆಗಮನವೂ ಆಯಿತು. ಸಾಧಾರಣ ಲುಂಗಿ, ಲಂಗ, ಸೀರೆಯುಡುತ್ತಿದ್ದ ಊರವರ ಜೀವನ ಶೈಲಿಯೂ ಬದಲಾಯಿತು. ಒಂದು ಕಯ್ಯಲ್ಲಿ ಚಪ್ಪಲಿಯನ್ನು ಇನ್ನೊಂದು ಕಯ್ಯಲ್ಲಿ ಲುಂಗಿಯನ್ನೋ ಲಂಗವನ್ನೂ ತುಸು ಮೇಲಕ್ಕೆತ್ತಿ ದೋಣಿಯೇರುವ ಜನರ ಜೀವನದಲ್ಲಿ ಬೂಟು, ಪೈಜಾಮ, ಪ್ಯಾಂಟುಗಳು ಬಂದಮೇಲೆ ನೀರಲ್ಲಿ/ಕೆಸರಿನಲ್ಲಿ ತುಸು ದೂರ ನಡೆಯಲು ಯಾತ್ರಿಕರಿಗೆ ಕಷ್ಟವಾಗತೊಡಗಿತು. ತುಸು ದೂರವಾದರೂ ವಾಹನಗಳಲ್ಲಿ ಸೇತುವೆ ದಾಟಿ ಹೋಗಲು ಜನರು ಉತ್ಸುಕರಾದಾಗ ಕಾದ್ರಿಯಕರ ಸಂಪಾದನೆಗೂ ಕತ್ತರಿ ಬಿತ್ತು. ಅಂಗಳದಲ್ಲಿ ದೋಣಿ ಅಂಗಾತ ಮಲಗಿತು. ಮನೆಯೊಳಗೆ ಕಾದ್ರಿಯಾಕಾನೂ. ಕೋವಿಡ್ 19 ಎನ್ನೋ ಮಹಾಮಾರಿ ಭಾರತಕ್ಕೆ ಲಗ್ಗೆಯಿಟ್ಟ ವಿಷಯ ದೊಡ್ಡ ದೊಡ್ಡ ಅಕ್ಷರಗಳಲ್ಲಿ ಬರೆದು ಮಾಧ್ಯಮಗಳಲ್ಲಿ ಕಾಣಿಸುತ್ತಿತ್ತು. ಎಲ್ಲರೂ ಭಯಭೀತರಾಗಿ ಮನೆಯಲ್ಲೇ ಕುಳಿತುಕೊಂಡಿರುವ ಸಮಯ. ಲಾಕ್ಡೌನ್ ಶುರುವಾಗಿದೆ… ಎಲ್ಲಾ ಕಡೆ ರಸ್ತೆಗಳು ಮುಚ್ಚಿವೆ… !! ಈ ಪರಿಸ್ಥಿತಿಯಲ್ಲಿ ರಾತ್ರಿ ಸುಮಾರು ಹನ್ನೆರಡು ಗಂಟೆಗಯ ಹೊತ್ತಲ್ಲಿ ಐದಾರು ಜನರ ಗುಂಪು ಕಾದ್ರಿಯಾಕನ ಮನೆಬಾಗಿಲು ತಟ್ಟತೊಡಗಿದರು. ಕಾದ್ರಿಯಾಕನಿಗೆ ಎದ್ದು ನಡೆಯಲಾಗುತ್ತಿಲ್ಲ. ಕಾಕನ ಮಡದಿ ಬಾಗಿಲು ತೆರೆದಾಗ ಅಲ್ಲಿ ಕಂಡದ್ದು ಶಂಕರ ಭಟ್ರ ಮಗ,  ತುಂಬು ಗರ್ಭಿಣಿ ಸೊಸೆ…. ನಾಲ್ಕೈದು ಊರ ಭಾಂಧವರು. ಗುಂಪಿನಿಂದ ಹೇಗಾದರೂ ಮಾಡಿ ಹೊಳೆದಾಟಿಸಿಕೊಡಬೇಕೆಂಬ ನಿವೇದನೆ. ಊರಲ್ಲಿ  ಯಾವೊಬ್ಬನೂ ಕರೆದರೆ ಬರುತ್ತಿಲ್ಲ. ಎಲ್ಲರಿಗೂ ಕೊರೊನಾದ ಭಯ. ಪೊಲೀಸರು ಯಾರನ್ನೂ ಪೇಟೆಗೆ ಬಿಡುತ್ತಿಲ್ಲ. ಆಸ್ಪತ್ರೆ ಸೇರಬೇಕಾದರೆ ಇನ್ನೊಂದು ರಾಜ್ಯದ ಗಡಿ ದಾಟಬೇಕು… ಎಲ್ಲಾ ಕಡೆ ಪೊಲೀಸರ ಸರ್ಪಗಾವಲು. ಆಂಬುಲೆನ್ಸ್ ಕೂಡಾ ರಾಜ್ಯದ ಗಡಿ ದಾಟಲು ಬಿಡುತ್ತಿಲ್ಲ. ಹೇಗಾದರೂ ಮಾಡಿ ಹೊಳೆ ದಾಟಿಸಿ ಕೊಡಬೇಕು… ಕಾದ್ರಿಯಾಕನಿಗೆ ಏನುಮಾಡಬೇಕೆಂದು ತೋಚಲಿಲ್ಲ. ದೋಣಿ ಹಳೆಯದಾಗಿದೆ. ಅಂಗಾತ ಮಲಗಿದೆ ಎಂದು ಹೇಳುವ ಹಾಗೆಯೂ ಇಲ್ಲ. ರಾತ್ರೋ ರಾತ್ರಿ ಎಲ್ಲರೂ ಸೇರಿ ದೋಣಿಯನ್ನು ಹೊಳೆಗಿಳಿಸಿದರು. ಕಾದ್ರಿಯಾಕನ ಗೈರು ಹಾಜರಿಯಲ್ಲಿ ಮಡದಿ ಪಾತುಮ್ಮ ಹುಟ್ಟು ಹಾಕಿ ಇನ್ನೊಂದು ದಡಸೇರಿಸಿ ವಾಪಸ್ ಬಂದಾಗ ಕಾದ್ರಿಯಾಕನ ಕಣ್ಣುಗಳು ತೇವಗೊಂಡಿತ್ತು.

ಕಾದ್ರಿಯಾಕ ಮತ್ತು ನಾಡ ದೋಣಿ Read Post »

ಕಾವ್ಯಯಾನ, ಗಝಲ್

ಗಝಲ್ ಜುಗಲ್

ಗಝಲ್ ಜುಗಲ್ ಮೊಟ್ಟಮೊದಲಬಾರಿಗೆ ಗಝಲ್ ಕವಿಗಳವಿವರಣೆಗಳೊಂದಿಗೆ ಶ್ರೀದೇವಿ ಕೆರೆಮನೆ ಗಿರೀಶ್ ಜಕಾಪುರೆ ನನ್ನ ದನಿಗೆ ನಿನ್ನ ದನಿಯು (ಶ್ರೀದೇವಿ ಕೆರೆಮನೆ) ಜಗದ ಜೀವನಾಡಿಯಲ್ಲಿ ಅಮೃತದ ಕಳಶ ಜೊತೆಯಾದಂತೆ ನನ್ನ ದನಿಗೆ ನಿನ್ನ ದನಿಯುಜೀವ ಕರುಣೆಯ ಪೊರೆವ ಜಗನ್ಮಾತೆಯ ಸುದೀರ್ಘ ಉಸಿರಂತೆ ನನ್ನ ದನಿಗೆ ನಿನ್ನ ದನಿಯು ಸೆರಗಿನ ಮರೆಯಿಂದ ಇಣುಕಿದ ಕೂಸಿನ ಹವಳದ ತುಟಿಯ ಕಟವಾಯಿಯಲ್ಲಿದೆ ನೊರೆವಾಲುಹಾಲುಗಲ್ಲದ ಮುಗ್ಧ ಮುಖದ ಮಗುವಿನ ಕಿಲಕಿಲ ನಗುವಂತೆ ನನ್ನ ದನಿಗೆ ನಿನ್ನ ದನಿಯು ಕನಸುಗಳೇ ಇರದ ಬರಡು ಎದೆಯೊಳಗೆ ಮೊಳೆತಿದೆ ನಿನ್ನ ನೆನಪಿನ ಗರಿಕೆ ಹುಲ್ಲಿನ ಚಿಗುರುಶರದೃತುವಿಗೆ ಆವರಿಸಿ ಮೈ ನಡುಗಿಸುವ ತಂಗಾಳಿಯಂತೆ ನನ್ನ ದನಿಗೆ ನನ್ನ ದನಿಯು ಸುತ್ತೆಲ್ಲ ಹರಡಿದೆ ಎದೆಕೋಟೆಯ ಬತ್ತಲಾರದ ಬಯಕೆಯಂತೆ ಸುರುಗಿಯ ಸಮ್ಮೋಹನಬದುಕಿನ ಪ್ರತಿಕ್ಷಣದಲ್ಲೂ ಜೀವದೃವ್ಯ ಚಿಮ್ಮಿದಂತೆ ನನ್ನ ದನಿಗೆ ನಿನ್ನ ದನಿಯು ಮಥುರೆಯೊಂದಿಗೆ ತೊರೆದು ಹೋದ ಕೃಷ್ಣನಿಗಾಗಿ ಜೀವಮಾನವಿಡಿ ಕಾತರಿಸಿದಳು ರಾಧೆನವಿಲುಗರಿಯ ಸಾವಿರ ಎಳೆಗಳ ನವಿರಾದ ಸ್ಪರ್ಶದಂತೆ ನನ್ನ ದನಿಗೆ ನಿನ್ನ ದನಿಯು ಸಪ್ತಸಾಗರಗಳಿದ್ದರೂ ಪಾಲ್ಗಡಲ ಬೆಳ್ನೊರೆಯೇ ಬೇಕಂತೆ ಲಕ್ಷ್ಮಿಕಾಂತ ಹರಿಗೆಶಿವನ ರುದ್ರ ಡಮರುಗದ ಅಬ್ಬರಿಸುವ ಅಲೆಯ ನಿನಾದಂತೆ ನನ್ನ ದನಿಗೆ ನಿನ್ನ ದನಿಯು ಸುರೆಯಲ್ಲೇ ಮುಳುಗಿರುವ ದೇವಲೋಕದ ಅಧಿಪತಿಗೆ ಅಮರಾವತಿಯೂ ಬೇಸರವಂತೆಗಸಗಸೆ ಪಾಯಸದ ಗೋಡಂಬಿಗೆ ನಶೆಯೇರಿದ ಅಮಲಂತೆ ನನ್ನ ದನಿಗೆ ನಿನ್ನ ದನಿಯು ಅಳುವ ಮಗುವಿನ ದನಿಗೆ ಮೈಮರೆತು ರಮಿಸಿ ಮುದ್ದಿಸುವ ನಿನ್ನ ಹಳೆಯ ಚಾಳಿ ಬಿಡು ಅಲ್ಲಮಮಗುವಿನ ಅಳುವಿನಲ್ಲಿರುವ ಸಪ್ತಸ್ವರದ ನಿನಾದದಂತೆ ನನ್ನ ದನಿಗೆ ನಿನ್ನ ದನಿಯು ಕಾತರಿಸುತಿದೆ ನಿದ್ದೆಯಿರದ ಕಮಲ ಸೂರ್ಯನಿಗೆ, ನೈದಿಲೆಯ ನೆತ್ತಿಗೀಗ ವಿರಹದ ಉರಿನಸುಕಿನ ಸೂರ್ಯನ ಎಳಸು ಕಿರಣಕೆ ನಾಚುವ ಇಬ್ಬನಿಯಂತೆ ನನ್ನ ದನಿಗೆ ನಿನ್ನ ದನಿಯು ಸಿರಿ, ಆಗದಿರುವುದಕೆ ಮರುಗುವ ಬದಲು ಪಾಲಿಗೆ ಬಂದಿದ್ದನ್ನು ಸಂತಸದಲಿ ಒಪ್ಪಿಕೊಒಮ್ಮೆಯೂ ಸೇರದ ಎಂದಿಗೂ ಅಗಲದ ರೈಲು ಹಳಿಯಂತೆ ನನ್ನ ದನಿಗೆ ನಿನ್ನ ದನಿಯು ನನ್ನ ದನಿಗೆ ನಿನ್ನ ದನಿಯು (ಗಿರೀಶ ಜಕಾಪುರೆ) ಮಧುರ ಮದಿರಿಗೆ ಅಧರ ಮಧು ಬೆರೆಸಿದಂತೆ ನನ್ನ ದನಿಗೆ ನಿನ್ನ ದನಿಯುನೆಲದ ಕುಸುಮಕೆ ಮುಗಿಲ ಘಮ ಸುರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಜಗದ ರೀತಿ ರಿವಾಜು ಮುರಿದು ಒಲವಿಗಾಗಿ ಎಲ್ಲೆ ಮೀರಿಗೆ, ಅಪ್ಪಿದೆಕಡಲು ತಾನೇ ಹರಿದು ನದಿ ಸೇರಿದಂತೆ ನನ್ನ ದನಿಗೆ ನಿನ್ನ ದನಿಯು ನಿನ್ನ ಹೆಸರು ಕೇಳಿದೊಡನೆ ಮನಸಿನಲಿ ಹೆಜ್ಜೆ ಗೆಜ್ಜೆಯ ಘಲಿರು ನಾದಒಲವ ಮಿಡಿತ ಎದೆಯಿಂದ ಎದೆಗೆ ಹರಿಸಿದಂತೆ ನನ್ನ ದನಿಗೆ ನಿನ್ನ ದನಿಯು ತಿಳಿಯದಾಗಿದೆ ಈಗ ಯಾವ ಬಿಂಬ ನನ್ನದು ಯಾವ ಬಿಂಬ ನಿನ್ನದುನನ್ನ ದೇಹ ನಿನ್ನ ರೂಪ ಧರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಮಗುವು ತಾಯಿಯ ಹಿಂದೆ ಬರುವಂತೆ ಬಂದೆ ಒಲವ ಸಮ್ಮೋಹಿತನಾಗಿಶಾರೀರ ಶರೀರವ ಅನುಕರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಜೀವದಲ್ಲಿ ಬೆರೆತೆ ನೀನು ಒಲವಾಗಿ, ಉಸಿರಾಗಿ, ಉಸಿರ ಸಿರಿಯಾಗಿದೇಹ ಆತ್ಮದ ಜೊತೆಜೊತೆಗೆ ಸಂಚರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಯಾವ ಜನ್ಮದ ಬಂಧವೂ ಚೆಂಬೆಳಕಾಗಿ ಬಂದು ಕೂಡಿದೆ ಬಾಳಿಗೆಕತ್ತಲಲಿ ನಂದಾದೀಪ ಉರಿಸಿದಂತೆ ನನ್ನ ದನಿಗೆ ನಿನ್ನ ದನಿಯು ನೀನು ಮುಟ್ಟಿದ ಶಿಲೆಗಳಿಂದ ಹೊಮ್ಮುತಿದೆ ಸುರಸಂಗೀತ ಝರಿಯಾಗಿಬರೀ ಸ್ಪರ್ಶದಿಂದ ಗಾಯ ಭರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಯಾವ ಪ್ರಹರದಲೂ ಮರೆತಿಲ್ಲ ಮಾಯೆ ‘ಅಲ್ಲಮ’ ಒಬ್ಬರನೊಬ್ಬರುಬೇಟವು ಬೇಟೆಗಾರನ ಸ್ಮರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಇದು ಶ್ರೀದೇವಿ ಕೆರೆಮನೆ ಹಾಗೂ ಗಿರೀಶ್ ಜಕಾಪುರೆಯವರು ಬರೆದ ಗಜಲ್ ಜುಗಲ್ ನನ್ನ ದನಿಗೆ ನಿನ್ನ ದನಿಯು ಸಂಕಲನದ ಶೀರ್ಷಿಕಾ ಗಜಲ್‌ಗಳು. ಇಲ್ಲಿ ಶ್ರೀದೇವಿ ಕೆರೆಮನೆಯವರು ೩೮ ಮಾತ್ರೆ ಬಳಸಿದ್ದರೆ, ಗಿಋಈಶ್ ಜಕಾಪುರೆಯವರು ೩೦ ಮಾತ್ರೆ ಬಳಸಿ ಬರೆದಿದ್ದಾರೆ. ಈ ಗಜಲ್‌ಗಳ ವೈಶಿಷ್ಟ್ಯತೆ ಏನೆಂದರೆ ಇಬ್ಬರೂ ಪರಸ್ಪರರ ತಕಲ್ಲೂಸ್‌ನ್ನು ತಮ್ಮ ಗಜಲ್‌ಗಳಲ್ಲಿ ಬಳಸಿಕೊಂಡಿದ್ದಾರೆ. ಅಳುವ ಮಗುವಿನ ದನಿಗೆ ಮೈಮರೆತು ರಮಿಸಿ ಮುದ್ದಿಸುವ ನಿನ್ನ ಹಳೆಯ ಚಾಳಿ ಬಿಡು ಅಲ್ಲಮಮಗುವಿನ ಅಳುವಿನಲ್ಲಿರುವ ಸಪ್ತಸ್ವರದ ನಿನಾದದಂತೆ ನನ್ನ ದನಿಗೆ ನಿನ್ನ ದನಿಯು ಎಂದು ಶ್ರೀದೇವಿಯವರು ಬರೆದಿದ್ದರೆ ಜೀವದಲ್ಲಿ ಬೆರೆತೆ ನೀನು ಒಲವಾಗಿ, ಉಸಿರಾಗಿ, ಉಸಿರ ಸಿರಿಯಾಗಿದೇಹ ಆತ್ಮದ ಜೊತೆಜೊತೆಗೆ ಸಂಚರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಎಂದು ಗಿರೀಶ ಜಕಾಪುರೆಯವರು ಹೇಳಿದ್ದಾರೆ. ಗಜಲ್ ಪರಂಪರೆಯಲ್ಲಿಯೇ ಇಂತಹುದ್ದೊಂದು ವಿಶಿಷ್ಟ ಪ್ರಯೋಗ ಪ್ರಪ್ರಥಮ ಬಾರಿಗೆ ಬಳಕೆಯಾಗಿದೆ. ಗಜಲ್ ಬರೆಯುವವರಿಗೆ ಇವು ಅಭ್ಯಾಸಕ್ಕೆ ಯೋಗ್ಯವಾದ ಗಜಲ್‌ಗಳಾಗಿವೆ

ಗಝಲ್ ಜುಗಲ್ Read Post »

ಕಾವ್ಯಯಾನ

ನಿವೇದನೆ…

ಕವಿತೆ ಹರೀಶ ಕೋಳಗುಂದ ಹೌದು…ನನಗೆ ಗೊತ್ತುನೀ ನನ್ನ ಪಕ್ಕದಲ್ಲೇ ಕುಳಿತಿರುವೆಸುಳ್ಳು ಹೇಳುವುದಿಲ್ಲ ನಾನುಈ ಕಡುಗತ್ತಲಲ್ಲೂ ನಿನ್ನ ಮುಖತಿಳಿನೀರ ಬಾವಿಯಲ್ಲಿ ಬಿದ್ದಚಂದಿರನ ಬಿಂಬವೆಂದು ಎಡತಾಕುತ್ತಿದೆ ನನ್ನೆದೆಗೆನಿನ್ನುಸಿರ ಬಿಸಿನಿನ್ನೆದೆಬಡಿತದ ಸದ್ದುನೀ ತೊಟ್ಟ ಕೈ ಬಳೆಯ ಘಲುಗುಮುಡಿದ ಮಲ್ಲಿಗೆಯ ಘಮಲು ಹೊತ್ತು ಉರುಳುತ್ತಿದೆಅರಿವೇ ಇಲ್ಲಏನೋ ಹೇಳುವ ಬಯಕೆತುಟಿ ಎರಡಾಗಿಸುವ ಧೈರ್ಯ ಸಾಲದುಕೈ ನಡುಗುತ್ತಿವೆಮೈ ಬೆವರುತ್ತಿದೆಎದೆಯೊಳಗೆ ಅಸ್ಪಷ್ಟ ಆತಂಕ ನೆನಪಿರಬಹುದು ನಿನಗೆನಾ ನಿನ್ನ ಮೊದಮೊದಲು ಕಂಡಾಗನೀ ನನ್ನ ಕಂಡೂ ಕಾಣದಂತೆನೋಡಿಯೂ ನೋಡದಂತೆಕಣ್ಣು ಹಾಯಸಿದಷ್ಟೂದೂರ ಕಾಣುವ ಮರೀಚಿಕೆಯಂತೆಕಣ್ಣಿಗೆ ಬಿದ್ದುಕೈಗೆ ಸಿಗದ ಮಾಯಾಜಿಂಕೆಯಂತೆಮರೆಯಾದದ್ದು ಮತ್ತೆಲ್ಲೋ ನಿನ್ನ ಹುಡುಕಿದಾಗಪಿಸುಗುಡುವ ರಾತ್ರಿಗಳಲಿತೆರೆದ ಕಿಟಕಿಯಾಚೆ ಮೊರೆವ ಕನಸುಗಳಂತೆಕರಿಮಲೆಯ ಬೆನ್ನಲ್ಲಿನ ನಿಚ್ಛಳ ನೀಲಾಕಾಶದಂತೆನಿನ್ನೊಲುಮೆಯ ಕುರುಹು ಸಿಕ್ಕಿದ್ದು ಈಗೀಗ ನನ್ನ ಪಾಲಿಗೆನಿನ್ನೊಲವಿನ ಜಲಪಾತದಲ್ಲಿಎಳೆ ಮೀನಾಗಿ ಈಜುವ ತವಕನಿನ್ನ ಸಾನಿಧ್ಯದಲಿನಾ ನನ್ನ ಸಂಪೂರ್ಣ ಕಳೆದುಕೊಂಡುಮತ್ತೊಮ್ಮೆ ಪಡೆದುಕೊಂಡುನಿನ್ನರ್ಧವೇ ಆಗಿ ಪರಿಪೂರ್ಣನಾಗುವ ತಹತಹಿಕೆಜ್ವರದುರಿಯಲ್ಲಿ ಕುದಿವ ಮಗುತಾಯ್ಮೊಲೆಗೆ ಕನವರಿಸುವಂತೆನಿನ್ನ ಹೆಸರ ಕರೆವಾಸೆಹೊಸಮಳೆಗೆ ಹದಗೊಂಡ ಮಣ್ಣಿನೆದೆಯ ಮೇಲೆಬಿದ್ದು ಬೇರೂರಿದ ಈ ಉಳಿಜಾಲಿಜಡಗೊಂಡು ಮುದಿ ಕೊರಡಾಗುವವರಗೆನಿನ್ನ ಸಾಂಗತ್ಯದಲಿನಿನ್ನ ನಿಷ್ಕಲ್ಮಶ ಪ್ರೇಮದುರಿಯಲಿದಹಿಸುವ ಬಯಕೆನಿನ್ನ ಮಡಿಲ ತೆಕ್ಕೆಯಲಿ ಬೆಚ್ಚಗೆ ಒರಗಿಕಣ್ಮುಚ್ಚುವ ಹಂಬಲ ******

ನಿವೇದನೆ… Read Post »

ಅನುವಾದ

ವಿಚಾರವೇನೆಂದರೆ…

ಅನುವಾದಿತ ಕವಿತೆ ಮೂಲ ಇಂಗ್ಲೀಷ್: ಹೆಲೆನ್ ಬ್ಯಾಸ್ ಕನ್ನಡಕ್ಕೆ: ಅಶ್ವಥ್ ಬದುಕ ಪ್ರೀತಿಸುವುದು,ಹಂಬಲವಿಲ್ಲವೆನಿಸಿದಾಗಲೂ,ಆಪ್ತವಿದ್ದೆಲ್ಲವೂ ಉರಿದು ಬೂದಿಯಾಗಿಕೈಗಂಟುವ ಧೂಳಿನಂತಾದರೂಆ ಬೂದಿಯ ಕೆಸರುಗಂಟಲಿಗಿಳಿದು ಬಿಗಿದಾಗಲೂಬದುಕ ಪ್ರೀತಿಸುವುದು. ಕೊರಗು ನಿನ್ನ ಬಳಿಯೇ ಕುಳಿತಿರುವಾಗಲೂಅದರ ಬೇಸಿಗೆಯುರಿ, ಗಾಳಿಯನು ನೀರಾಗಿಸಿ,ಒಲೆಮೇಲೆ ಕುದಿವಂತೆ ಬೊಬ್ಬುಳಿ ತರಿಸಿನಿನ್ನುಸಿರಿಗೆ ತಾಕಿಸಿದಾಗಲೂ,ಅದೇ ಕೊರಗು ನಿನ್ನದೇ ಮಾಂಸಖಂಡಗಳಂತೆಭಾರವೆನಿಸಿ, ಉಲ್ಪಣಗೊಂಡು,ಕೊರಗಿನದೇ ಸ್ಥೂಲಕಾಯವಾದಾಗಲೂದೇಹವಿದೆಲ್ಲವನು ಹೇಗಾದರೂ ಸಹಿಸೀತು? ಅದುಕೊಳ್ಳುತ್ತಲೇಮುದ್ದಾದ ನಗುವಿರದ, ನೀಲಗಣ್ಣುಗಳಿರದಆಡಂಬರವಿರದ ಸಾಮಾನ್ಯ ಮುಖದಂತೆಬದುಕನೊಮ್ಮೆ ಅಂಗೈಗಳ ನಡುವೆ ಹಿಡಿದುಹೇಳಿಬಿಡು ಖಚಿತ, ನಾನಿನ್ನ ಸ್ವಾಗತಿಸುತ್ತೇನೆನಾನಿನ್ನ ಪ್ರೀತಿಸುತ್ತೇನೆ, ಮತ್ತೊಮ್ಮೆ ಎಂದು. **************

ವಿಚಾರವೇನೆಂದರೆ… Read Post »

ಇತರೆ, ಲಹರಿ

ಹೆಣ್ಣುಮಕ್ಕಳ ಓದು

ಲಹರಿ ವಸುಂಧರಾ ಕದಲೂರು ಒಂದು ತಮಾಷೆಯ ಲಹರಿ…     ಹೆಣ್ಣು ಮಕ್ಕಳು ಓದು ಬರಹ ಕಲಿಯೋದು ಏಕೆ? ಅವರು ಯಾವ ಸಾಮ್ರಾಜ್ಯ ಕಟ್ಟಬೇಕು? ಯಾರನ್ನ ಉದ್ಧಾರ ಮಾಡಬೇಕು? ಇವೇ ಇಂತಹವೇ ನೂರು ಪ್ರಶ್ನೆಗಳು ಹುಟ್ಟಿಕೊಳ್ತವೆ.    ಇಂಥ ಪ್ರಶ್ನೆಗಳು ಈಗ ಹೆಚ್ಚು ಇರಲಾರದು ಬಿಡಿ. ಆದರೂ ಲೇಖನಿ ಹಿಡಿದರೂ, ಕೀಲಿಮಣೆ ಕುಟ್ಟಿದರೂ ಮುಸುರೆ ತಿಕ್ಕೋದು, ತೊಟ್ಟಿಲು ತೂಗೋದು ನಿಮಗೆ ತಪ್ಪಿದ್ದಲ್ಲ ಎಂದು ಕೊಂಕು ರಾಗ ಹಾಡುವವರಿಗೇನೂ ಕಮ್ಮಿಯಿಲ್ಲ.    ಅಲ್ಲಾ ಇವರೇ.., ನಮ್ಮ ಮನೆ ಪಾತ್ರೆ ಪರಡೆಗಳನ್ನು ನಾವು ತೊಳೆದು ಸ್ವಚ್ಛ ಮಾಡಿಕೊಳ್ಳೋದ್ರಲ್ಲಿ ಏನು ತಪ್ಪಿದೆ ಹೇಳಿ? ಕೆಲಸಕ್ಕೆ ಹೊರಗೆ ಹೋಗಿ ಬಂದು ಮನೇಲಿ ಅಚ್ಚುಕಟ್ಟು ಮಾಡಬಾರದು ಅಂತ ಇದೆಯೇ? ಇಲ್ಲಾ ನಾಕಾರು ಅಕ್ಷರ ಕಲಿತರೆ ಮಕ್ಕಳನ್ನು ಹೆರಬಾರದು ಎಂದು ಎಲ್ಲಾದರೂ ಕಾನೂನಾಗಿದೆಯೇ?    ಒಟ್ಟಿನಲ್ಲಿ ಜನಕ್ಕೆ ಹೇಗಿದ್ದರೂ ತಪ್ಪೇ… ಅವರಿಗೆ ಕಂಡವರನ್ನು ಮೂದಲಿಸದೇ ಇರಲಾಗದು. ಇತರರನ್ನು ಎತ್ತಾಡದೇ ಹೋದರೆ ತಿಂದದ್ದೂ ಜೀರ್ಣವಾಗದು. ಕಲಹ ಪ್ರಿಯರು ಮೊಸರಲ್ಲಿ ಕಲ್ಲು ಹುಡುಕೀ ಹುಡುಕಿ, ಅದು ಸಿಗದೇ ಹೋದಾಗ ತಾವೇ ನಾಕಾರು ಬೆಣಚು ಚೂರು ಹಾಕಿಬರುವಷ್ಟು ಮಟ್ಟಿಗೆ ಕೆಟ್ಟಿರುತ್ತಾರೆ.   ಈಗಂತೂ ಮನೇಲಿ ಕೂರುವವರಿಗಿಂತಲೂ ಹೊರಗೆ ಒಂದಿಲ್ಲೊಂದು ಕೆಲಸಕ್ಕೆ ಹೋಗಿ ಬರುವವರೇ ಹೆಚ್ಚು. ಹಳ್ಳಿಯಿರಲಿ, ಪಟ್ಟಣವಿರಲಿ ವಿದ್ಯೆ ಕಲಿಯುವುದಕ್ಕೆ ಹಿಂದಿನಂತೆ ಅಡ್ಡಿ ಆತಂಕಗಳ ಹರ್ಡಲ್ಸ್ ಹೆಚ್ಚು ಇಲ್ಲ. ಹಾಗಾಗಿ ಹೆಣ್ಣುಮಕ್ಕಳು ವಿದ್ಯಾವತಿಯರಾಗುವ ನಾಗಾಲೋಟಕ್ಕೆ ತಡೆಯಂತೂ ಸಧ್ಯಕ್ಕಿಲ್ಲ.    ಆದರೂ ಒಂದು ಸಂದೇಹ ಯಾವಾಗಲೂ ಕಾಡುತ್ತಿರುತ್ತದೆ.     ಏಕೆ ಹಿಂದಿನವರು ಮಹಿಳೆಯರನ್ನು ಓದುವ, ಕಲಿಯುವ ಅಪೂರ್ವ ಅವಕಾಶಗಳಿಂದ ವಂಚಿತರನ್ನಾಗಿ ಮಾಡಿದ್ದರು ಎಂದು..?!      ಈಗಿನಂತೆ ಸೈನ್ಸು, ಕಾಮರ್ಸು, ಆರ್ಟ್ಸು ಎಂದೆಲ್ಲಾ ಹೆಚ್ಚೇನು ಪಠ್ಯಶಾಖೆಗಳು ಇರದಿದ್ದ ಕಾಲದಲ್ಲಿ ಏನೇನಿತ್ತು ಓದಲು? ಮಹಾಕಾವ್ಯಗಳೂ, ಕತೆ- ಪುರಾಣಗಳೂ, ವೇದೋಪನಿಷತ್ತುಗಳೂ ಇವೇ ಮೊದಲಾದವು ಅಲ್ಲವೇ?     ವೇದೋಪನಿಷತ್ತು ಕಲಿಯಲು ಅನ್ಯರಿಗೆ ನಿಷಿದ್ಧವಿದ್ದಾಗ ಪುರಾಣ ಕಾವ್ಯಗಳನ್ನಲ್ಲದೇ ವಿದ್ಯಾಕಾಂಕ್ಷಿಗಳಿಗೆ ಮತ್ತೇನು ಕಲಿಸಬೇಕಿತ್ತು? ಅಕ್ಷರಾಭ್ಯಾಸ, ಶ್ಲೋಕಾಭ್ಯಾಸ, ಸಾಮಾನ್ಯ ಲೆಕ್ಕ – ಪುಕ್ಕ ಕಲಿಯುವುದು ಬಿಟ್ಟರೆ ಉಳಿಯುವುದು ಮಹಾಕಾವ್ಯಗಳೇ…    ಅವಾದರೂ ಎಂತಹವು..!? ಲೋಕಪ್ರಸಿದ್ಧವಾದ ರಾಮಾಯಣ – ಮಹಾಭಾರತ; ಅದರ ಉಪಕತೆ – ಪುರಾಣ…   ಇನ್ನು ನಮ್ಮ ಹೆಣ್ಣುಮಕ್ಕಳು ಮಹಾಕಾವ್ಯಗಳನ್ನು ಓದಿ, ಅಭ್ಯಾಸ ಮಾಡಿ ತಿಳಿಯುವುದಾದರೂ ಏನಿತ್ತು ಹೇಳಿ? ಬರಿಯ ಶಂಕೆ, ಅಪಮಾನ, ಸೇಡಿನ ಕಿಡಿ, ಮತ್ಸರ, ಶಪಥ, ತಿರಸ್ಕಾರ, ಅಪಮಾನ, ಅಗಲುವಿಕೆ, ಯುದ್ಧ, ಸಾವು, ನೋವು ಇತ್ಯಾದಿ, ಇತ್ಯಾದಿ, ಇತ್ಯಾದಿ…     ಇಂತಹವನ್ನು ಓದುವ ಬದಲು ಮನೆವಾರ್ತೆಗಳೇ ಮುಖ್ಯ ಎಂದುಕೊಂಡು ಓದಿನತ್ತ ನಮ್ಮ ಹೆಣ್ಣುಮಕ್ಕಳು ಮುಖ ತಿರುಗಿಸಿರಲಿಕ್ಕೂ ಸಾಕು.       ಮನೆ ಕೆಲಸ ಎಂದರೆ ಬರೀ ಅಡುಗೆ, ತೊಳಿ- ಬಳಿ ಅಲ್ಲ. ಅಡುಗೆಗೆ ಪೂರಕ ಸಾಮಾಗ್ರಿಗಳು ಇವೆಯೇ ಎಂದು ನೋಡಿಕೊಂಡು ಅವನ್ನು ಸಿದ್ಧಮಾಡಿಕೊಳ್ಳಬೇಕು. ಏನೇನು ಮಾಡಬೇಕು, ಮಳೆಗಾಲಕ್ಕೆ, ಬೇಸಿಗೆಗೆ, ಚಳಿಗೆ ಹೀಗೆ ಹವಮಾನಕ್ಕೆ ಅನುಕೂಲಕರ ಸಿದ್ಧತೆಯಾಗಿರಬೇಕು. ಹಬ್ಬ ಹರಿದಿನ ಶುಭಕಾರ್ಯ ಇತರೆ ಸಮಾರಂಭಗಳಿಗೆ ತಯಾರಿ ಮಾಡಬೇಕು. ಮಕ್ಕಳು – ಹಿರಿಯರು ಹೊರಗೆ ದುಡಿಯಲು ಹೋಗುವವರ ದೇಖರೇಖಿ ನೋಡಬೇಕು. ಬಂಧು ಬಳಗ, ಅತಿಥಿ ಅಭ್ಯಾಗತರ ಯೋಗಕ್ಷೇಮ ವಿಚಾರಿಸಿಕೊಳ್ಳಬೇಕು. ಮನೆವಾರ್ತೆ ಒಂದೇ ಎರಡೇ…!    ಇವೇ ಇಷ್ಟೆಲ್ಲಾ ಇರುವಾಗ ಪುರಾಣ- ಕಾವ್ಯ ಓದಿಕೊಂಡು ಕೂರಲಿಕ್ಕಾಗುತ್ತಿತ್ತೇ? ಅದೇನು ಹೊಟ್ಟೆ ತುಂಬಿಸುತ್ತದೆಯೇ? ನೆತ್ತಿ ಕಾಯುತ್ತದೆಯೇ? ಹಾಗಾಗಿ ಕಲಿಯಲು ನಮ್ಮ ಹೆಣ್ಣು ಮಕ್ಕಳೂ ಅಸಡ್ಡೆ ಮಾಡಿರಬಹುದು ಬಿಡಿ.       ಇಲ್ಲಾ ಏನಿದೆ ಇದರೊಳಗೆ ಎಂದು ಗುರುಗಳ ಗರಡಿಗೆ ಕಲಿಯಲು ಹೋದವರಿಗೆ ಹೆಣ್ಣುಗಳನ್ನು ಕಾವ್ಯದೊಳಗೆ ಇನ್ನಿಲ್ಲದಂತೆ ಅಬಲೆಯರೂ, ಹೊಟ್ಟೆಕಿಚ್ಚಿನವರೂ, ಯುದ್ಧ ಕಾರಣರೂ, ತಂದು ಹಾಕುವವರೂ, ಕಲಹ ಪ್ರಿಯರೂ ಹೀಗೆ ಚಿತ್ರಿಸಿರುವುದನ್ನು ಕಂಡು ಕೋಪಗೊಂಡು ಇದೇಕೆ ಹೀಗೆ..?! ಎಂದು ಮಾತಿನ ಚಕಮಕಿಯಾಗಿ ವಾದವಿವಾದ ತಾರಕಕ್ಕೆ ಹಚ್ಚಿಕೊಂಡಿರಬಹುದು.      ಹಾಗಾಗಿ ಇದೆಲ್ಲಾ ಬೇಡಬಿಡು, ಚೆನ್ನಾದ ವಿಚಾರಗಳು ಕಲಿಯುವ ಸಂದರ್ಭ ಬಂದಾಗಲೇ ನಾವು ಓದುವ ಬಗ್ಗೆ ಚಿಂತಿಸೋಣ ಎಂದು ನಮ್ಮ ಹೆಣ್ಣುಮಕ್ಕಳು ವಿಚಾರ ಮಾಡಿರಬೇಕು.   ಹಾಗಾಗಿಯೇ ಆಧುನಿಕ ವಿದ್ಯಾಭ್ಯಾಸ ಕ್ರಮ ಜಾರಿಗೆ ಬಂದು ಕಲೆ, ವಿಜ್ಞಾನ, ವಾಣಿಜ್ಯ ವಿಚಾರಗಳು ಓದುವ ರೂಢಿ ಬೆಳೆದು ಬಂದ ಮೇಲೆಯೇ ನಮ್ಮ ಹೆಣ್ಣುಮಕ್ಕಳು ಓದಿನಲ್ಲಿ ಮೇಲುಗೈ ಸಾಧಿಸಿರುವುದು…  ಇದು ನನ್ನ ಒಂದು ವಿಚಾರವಷ್ಟೇ… ಸತ್ಯಕ್ಕೆ ಹಲವು ಮಗ್ಗಲುಗಳಿವೆ. – —

ಹೆಣ್ಣುಮಕ್ಕಳ ಓದು Read Post »

You cannot copy content of this page

Scroll to Top