ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಮಗುವಾದ ನೆಲ ಬಿದಲೋಟಿ ರಂಗನಾಥ್ ಬಿತ್ತಿದ ಬೀಜ ಮೊಳಕೆ ಒಡೆದು ನಗುವಾಗಸಿರಿಯು ಮಡಿಲು ತುಂಬಿತುಮಗುವಾದ ನೆಲಮಮತೆಯ ಕರುಳ ಹೂ ಬಿಟ್ಟಿತು ಎದೆಯೊಳಗಿನ ತಲ್ಲಣ ಕಣ್ಣು ಚಾಚಿ ನೋಡುತ್ತಿರಲುಖುಷಿಯ ಸಮುದ್ರ ನಕ್ಕುನಕ್ಷತ್ರಗಳು ಅಂಗೈಯೊಳಗೆ ಆಡಿದವು ಮೊಳಕೆಯ ಕುಡಿ ಸಾಗುತಿರಲುಮಳೆಯ ಸ್ಪರ್ಶಕೆ ಕಳೆಗಟ್ಟಿಮೆದು ನೆಲದ ಭಾವ ಕಲ್ಲುಗಳೊಂದಿಗೆ ಮಾತಾಡಿತು ಬೆವರ ಹನಿಯು ಬಿದ್ದುಬಿತ್ತು ಹುತ್ತ ನೆಲ ಬಸಿರಾಗುವುದೆಂದರೇಹೊಳೆ ಸೀಳಿನಲಿ ಬೊಗಸೆ ನೀರು ಕುಡಿದ ಸಂತಸಮೈಯೊಳಗೆ ಚಂದ್ರ ನಡೆದ ಗುರುತು ***********

ಕಾವ್ಯಯಾನ Read Post »

ಅನುವಾದ

ಅನುವಾದ ಸಂಗಾತಿ

ಸೇಡಿನ ಫಲ ಮೂಲ: ವಿಲಿಯಂ ಬ್ಲೇಕ್(ಇಂಗ್ಲೀಷ್) ಕನ್ನಡಕ್ಕೆ: ವಿ.ಗಣೇಶ್ ನನ್ನ ಗೆಳೆಯನ ಮೇಲೆ ಬಂದ ಮುನಿಸಿಗೆ ನಾನು    ತಾಳ್ಮೆಯಿಂದಲೆ ಅಂದೆ, ‘ಸುಮ್ಮನಿರು’  ಎಂದು    ಮಾಯವಾಗಿಯೆ ಹೋಯ್ತು ಕೋಪವಂದು.    ನನ್ನ ವೈರಿಯ ಮೇಲೆ ಬಂದ ಮುನಿಸಿಗೆ ನಾನು    ಕೋಪದಿಂದಲೆ ನುಡಿದೆ, ‘ಚೆಂಡಾಡು’ ಎಂದು    ಮನದೊಳಗೆ ಬೆಳೆಯಿತದು ನನಗರಿವಿಲ್ಲದೆಲೆ    ಹಗೆತನದ ಬೀಜವದು ಮೊಳಕೆಯೊಡೆಯುತ್ತ    ಸಸಿಯಾಗಿ ಬೆಳೆದು ಮರವಾಗಿ ನಿಂತಿತ್ತು    ಭಯವೆಂಬ ಕಣ್ಣೀರ, ನಗುವೆಂಬ ಎಳೆ ಬಿಸಿಲ    ನೀಡುತ್ತ ಬೆಳೆಸಿದೆನು ಹಗಲು ರಾತ್ರಿಯೆನ್ನದೆಲೆ    ವಂಚನೆಯ ತಂತ್ರಗಳ ನಡುನಡುವೆ ತುರುಕುತ್ತ    ಮರವಾಗಿ ಬೆಳೆಸಿದೆನು ಸೇಡಿನಾ ಗಿಡವನ್ನು    ಮರ ಬೆಳೆದು ಹೂವಾಯ್ತು, ಹೂವರಳಿ ಹಣ್ಣಾಯ್ತು    ನನ್ನ ಅರಿ ನೋಡಿದನು ಥಳಥಳಿಪ ಹಣ್ಣನ್ನು    ಕಿಂಚಿತ್ತು ಯೋಚಿಸಿದಲೆ ನನ್ನ ಹಣ್ಣೆಂದರಿತು    ಕಳಿತ ಹಣ್ಣನು ಕದ್ದು ತಿಂದು ಮುಗಿಸಿದನು    ಕತ್ತಲಿನ ಆವರಣ ಅವನ ಕಣ್ಣನು ಮುಚ್ಚಿ    ನನ್ನ ಖೆಡ್ಡದಲಿ ಅವನ ಎಳೆದು ಕೆಡವಿತ್ತು     ಬೆಳಗಿನಾ ಬೆಳಕಲ್ಲಿ ಸಂತಸದಿ ನೋಡಿದೆನು     ನನ್ನ ಮರದಡಿಯಲ್ಲಿ ಸೆಟೆದು ಬಿದ್ದಾ ವೈರಿಯನು   A Poisonous Tree: By William Blake ******** ವಿ.ಗಣೇಶ್

ಅನುವಾದ ಸಂಗಾತಿ Read Post »

ಅನುವಾದ

ಅನುವಾದ ಸಂಗಾತಿ

ಕೊಡಬಲ್ಲಿರಾ ಯಾರಾದರೂ ನನಗೆ ನನ್ನ ಸ೦ಪೂರ್ಣ ಅಸ್ತಿತ್ವವನ್ನ? ಮೂಲ: ನೋಷಿ ಗಿಲ್ಲಾನಿ(ಉರ್ದು) ಕೊಡಬಲ್ಲಿರಾ ಯಾರಾದರೂ ನನಗೆ ನನ್ನ ಸ೦ಪೂರ್ಣ ಅಸ್ತಿತ್ವವನ್ನನನ್ನ ತೋಳುಗಳನ್ನ, ನನ್ನ ಕಣ್ಣುಗಳನ್ನ, ನನ್ನ ಮುಖವನ್ನ? ನಾನೊ೦ದು ನದಿ, ಹರಿದು ಬೆರೆಯುತ್ತಿದ್ದೇನೆ ಮತ್ತದೇ ಕಡಲೊಳಗೆ.ಯಾರಾದರೂ ಹರಿಸ ಬಲ್ಲಿರಾ ನನ್ನನ್ನು ಮರುಭೂಮಿಯಲ್ಲಿ? ಸಾಗುತ್ತಿದೆ ಬದುಕು, ಆದರೆ ನನ್ನ ಬಾಲ್ಯ, ನನ್ನ ಮಿಣುಕು ಹುಳು,ನನ್ನ ಗೊ೦ಬೆ ಗಳನಲ್ಲದೇ ಮತ್ತೇನನ್ನೂ ಬೇಡಲಾರೆ ಈ ಬದುಕಿ೦ದ! ಈ ಹೊಸ ಋತು ಯಾಕೋ ಒಗ್ಗುತ್ತಿಲ್ಲ ನನಗೆ.ನನ್ನನ್ನು ಕರೆದೊಯ್ಯಿರಿ ಹಿ೦ದಕ್ಕೆ ನಗರದ ಹಲವು ಮುಖಗಳಲ್ಲಿ ನನ್ನೊಳಗಿನೊಳಗನ್ನು ಓದಬಲ್ಲಮುಖವೊ೦ದನ್ನು ಪಡೆವ ಹ೦ಬಲದ ನನ್ನ ಹಳೆಯ ಕನಸುಗಳಿಗೆ! ಸುದೀರ್ಘ ಕಾಲದಿ೦ದ ನನ್ನ ಬದುಕೊ೦ದು ಸುಳಿಗೆ ಸಿಕ್ಕ ನಾವೆ!ಓ ದೇವರೇ, ಮುಳುಗಿಸು ಅದನ್ನು ಇಲ್ಲವೇ ಮರಳಿಸು ಮರುಭೂಮಿಗೆ! ******** ಮೇಗರವಳ್ಳಿ ರಮೇಶ್

ಅನುವಾದ ಸಂಗಾತಿ Read Post »

ಇತರೆ, ಜೀವನ

ಇತರೆ

ಮರುಕ ಹುಟ್ಟುತ್ತದೆ ವಿದ್ಯಾ ಶ್ರೀ ಎಸ್ ಅಡೂರ್ ಕೆಲವು ಸಮಯದ ಹಿಂದೆ ನಾನು ಪಟ್ಟಣದಲ್ಲಿರುವ ನನ್ನ ಗೆಳತಿಯ ಮನೆಗೆ ಹೋಗಿದ್ದೆ. ಬಾಲ್ಯದ ಗೆಳತಿ.ನಾನು ಮದುವೆಯಾಗಿ ಒಂದು ಹಳ್ಳಿಯಿಂದ ಇನ್ನೊಂದು ಹಳ್ಳಿಗೆ ಶಿಫ್ಟ್ ಆಗಿದ್ದರೆ, ಆಕೆಯೋ ನನ್ನೊಂದಿಗೆ ಹಳ್ಳಿಯಲ್ಲಿ ನನ್ನೆಲ್ಲ ತುಂಟತನಗಳಿಗೆ ಜತೆಯಾಗಿದ್ದವಳು, ಮದುವೆಯಾಗಿ ಮಹಾನಗರವನ್ನು ಸೇರಿ “ಸಿಟಿವಂತ“ಳಾಗಿದ್ದಳು. ಅನೇಕ ವರ್ಷಗಳಿಂದ ಭೇಟಿಯಾಗಿರದಿದ್ದ ನನಗೆ ಮಜಬೂತು ಖಾತರ‍್ದಾರಿಯ ಪ್ಲಾನ್ಮಾಡಿಕೊಂಡಿದ್ದಳು.ಆತ್ಮೀಯತೆಯಿಂದ ನನ್ನನ್ನು ಬರಮಾಡಿಕೊಂಡು ಮಾತಿನಲ್ಲಿ ಮೈಮರೆತಿದ್ದವಳು ಅಚಾನಕ್ಕಾಗಿ ನಾಲಿಗೆ ಕಚ್ಚಿಕೊಂಡು ತನ್ನ ಏಳೆಂಟು ವರ್ಶದ ಮಗಳನ್ನು ಬಳಿಗೆ ಕರೆದು ಕಿವಿಯಲ್ಲಿ ಏನೋ ಪಿಸುಗುಟ್ಟಿದಳು. ಮರುಕ್ಷಣವೇ ಆ ಹುಡುಗಿ ಮನೆಯಿಂದ ಹೊರಗೋಡಿ ಸ್ವಲ್ಪ ಹೊತ್ತಿಗೆ ವಾಪಾಸಾಗಿದ್ದನ್ನು ನಾನು ಕಡೆಗಣ್ಣಿನಲ್ಲಿ ಗಮನಿಸಿದೆ. ಇಡೀದಿನ ಗೆಳತಿಯ ಆದರಾಥಿತ್ಯವನ್ನು ಸ್ವೀಕರಿಸಿ ದಣಿದಿದ್ದ ನಾನು, ಸ್ವಲ್ಪ ಹೊತ್ತು ಆರಾಮಾಗಿ ಕೂತಿರುವಾಗ ಆಕೆಯ ಮಗಳು ನನ್ನ ಜತೆಗೆ ಬಂದು ಕುಳಿತಳು.ನನಗೋ ತಡೆಯದೆ, “ಆಗ ಅಮ್ಮ ನಿನ್ನ ಬಳಿ ಏನು ಹೇಳಿದುದಕ್ಕೆ ನೀನು ಹೊರ ಹೋಗಿಬಂದೆ?” ಎಂದು ಕೇಳಿದೆ. ಮಾತು ತಪ್ಪಿಸಲರಿಯದ ಮುಗ್ಧಮಗು ”ನಮ್ಮ ಮನೆಯ ಫ್ರಿಜ್ಜಿನಲ್ಲಿ ಹಾಲು ಖಾಲಿಯಾಗಿ ಅಮ್ಮನಿಗೆ ತರುವುದು ಮರೆತಿತ್ತು. ಅದಕ್ಕೆ ಪಕ್ಕದ ಮನೆಯ ಆಂಟಿಯ ಫ್ರಿಜ್ಜಿನಿಂದ ಹಾಲು ಇಸಿದುಕೊಂಡು ಬರಲು ಅಮ್ಮ ಕಳಿಸಿದ್ಲು“ ಎಂದು ಹೇಳಿತು. ನಾನು ಪುನಃ ಕುತೂಹಲ ತಡೆಯದೆ ಫ್ರಿಜ್ಜಿಗೆ ಹಾಲು ಎಲ್ಲಿಂದ ಬರುತ್ತೆ ಎಂದು ಕೇಳಿದೆ. ಅದಕ್ಕೆ ಮಗು ”ರಾತ್ರಿ ಮಲಗುವಾಗ ಬಾಗಿಲು ಹತ್ರ ಚೀಟಿ ಹಾಕಿದ್ರೆ, ಬೆಳಿಗ್ಗೆ ಬಾಗಿಲು ತೆಗೆಯುವಷ್ಟರಲ್ಲಿ ಹಾಲು ಬಂದಿರುತ್ತೆ “ಎಂದು ಹೇಳಿತು. ಮನದಲ್ಲಿ ಇನ್ನೂ 2-3 ಪ್ರಶ್ನೆಗಳಿದ್ದರೂ,ಅವುಗಳು ಆ ಮಗುವಿನ ಜ್ಞಾನಕ್ಕೆ ನಿಲುಕದ್ದು ಎಂದು ಸುಮ್ಮನಾದೆ. ಗೆಳತಿಯ ಜತೆ ಬಾಲ್ಯದ ನೆನಪುಗಳನ್ನು ಪುನಃ ಒಮ್ಮೆ ಹಸಿರಾಗಿಸಿ ಸಂಜೆಗೆ ನಮ್ಮೂರಿನ ಬಸ್ಸು ಹತ್ತಿದವಳಿಗೆ “ಫ್ರಿಜ್ಜಿನಹಾಲಿನಮೂಲ” ಮನದಾಳದಲ್ಲಿ ದಾರಿ ಹುಡುಕತೊಡಗಿತ್ತು. ಸರಿಯಾಗಿ ನೆನಪಿಲ್ಲವಾದರೂ ಅಂದಾಜು ನಾನು 2-3ನೇ ತರಗತಿಯಲ್ಲಿರುವಾಗಲೊಮ್ಮೆ ನಮ್ಮ ತಾತ ನಮ್ಮ ಮನೆಗೆ ಬಂದಿದ್ದಾಗ,ಅವರಿಗೆ ಕಾಫಿ ಮಾಡಲೂ ನಮ್ಮ ಮನೆಯಲ್ಲಿ ಹಾಲಿರಲಿಲ್ಲ. ಬಡತನದ ಅಂದಿನ ದಿನಗಳಲ್ಲಿ ಮೂರು ಮಕ್ಕಳ ತಾಯಿಯಾದ ನಮ್ಮಮ್ಮ, ಕೊಂಡು ತಂದು ನಮಗೆ ಹಾಲು ಕುಡಿಸುವಷ್ಟು ಸಿರಿವಂತೆಯಾಗಿರಲಿಲ್ಲ. ಪರಿಸ್ಥಿತಿಯನ್ನು ಅರ‍್ಥ ಮಾಡಿಕೊಂಡ ನಮ್ಮ ತಾತ ಅಮ್ಮನಿಗೆ “ನೀನು ಮದುವೆಗೂ ಮುಂಚೆ ಹಟ್ಟಿ ತುಂಬಾ ದನಕರುಗಳನ್ನು ಕಟ್ಟಿ, ಸಾಕಿ,ಹಾಲನ್ನುಮಾರಿ,ಮನೆಯಲ್ಲಿ ಹಾಲು, ಮಜ್ಜಿಗೆ, ತುಪ್ಪ ಎಂದು ಸಮೃದ್ಧಿಯನ್ನು ಉಂಟುಮಾಡಿದ್ದವಳು. ಈಗ ನಿನ್ನ ಮಕ್ಕಳಿಗೆ ಹಾಲಿಲ್ಲವೆಂದು ಕೊರಗಬೇಡ. ನಿನ್ನಿಷ್ಟದ ಕರು ಈಗ ಹಸುವಾಗಿ ಯಥೇಚ್ಚ ಹಾಲನ್ನು ನೀಡುತ್ತಿದೆ. ಅದನ್ನು ನಿನ್ನಲ್ಲಿಗೆ ಕಳಿಸಿಕೊಡುತ್ತೇನೆ. ಮಕ್ಕಳು ಹಾಲು, ಮಜ್ಜಿಗೆಯ ಬಣ್ಣ ನೋಡಲಿ ಎಂದಾಗ ಅಮ್ಮ ಮತ್ತು ಅಜ್ಜನ ಕಣ್ಣಾಲಿಗಳು ತುಂಬಿದ್ದವು. ಮಾತಿಗೆ ತಪ್ಪದೇ ಅಜ್ಜ ಹಸುವನ್ನೂ ಅದರ ಕರುವನ್ನೂ ನಮ್ಮಲ್ಲಿಗೆ ಕಳುಹಿಸಿಯೇಬಿಟ್ಟರು .ಅನೇಕ ವರ‍್ಷಗಳಿಂದ ಅಮ್ಮನನ್ನು ನೋಡಿರದಿದ್ದ ಅಮ್ಮನೇ ಸಾಕಿದ್ದಹಸು, ಅಮ್ಮನನ್ನು ನೋಡಿ ಬಾಲ ನಿಮಿರಿಸಿ ಕುಣಿದು ಕುಪ್ಪಳಿಸಿತು .”ಬಂದೆಯಾ ಕುಂಟಿಮಾಚಕ್ಕ” ಎಂದು ಅಮ್ಮ ಹಸುವನ್ನು ಸ್ವಾಗತಿಸಿದಾಗ., ಇದೆಂತ ಹೆಸರು ಎಂಬ ನಮ್ಮ ಪ್ರಶ್ನೆಗೆ, ಕುಳ್ಳಗಿನ ಮಾಚಕ್ಕ ಎಂಬ ಹಸು ಕೊಂಡಾಟದಲ್ಲಿ ಕುಂಟಿಮಾಚಕ್ಕ ಎಂದಾಗಿದೆ ಎಂದರು.ನಮಗಂತೂ ಅದಕ್ಕಾಗಿ ಕಟ್ಟಿದ ಸಣ್ಣ ಹಟ್ಟಿಗೆ ದಿನಕ್ಕೊಂದು ಐವತ್ತು ಸಲ ಹೋಗಿ ಹಸು ಕರುವನ್ನು ನೋಡಿಕೊಂಡು ಬರುವುದೇ ಒಂದು ಸಂಭ್ರಮವಾಯಿತು .ಅಲ್ಲಿಂದ ಮುಂದೆ ನಮಗೆ ಕುಡಿಯಲು ಮಾತ್ರವಲ್ಲದೆ ಮಾರಾಟ ಮಾಡುವುದಕ್ಕೂ ಹಾಲು ಒದಗತೊಡಗಿತು. ಅನಂತರ ಹುಟ್ಟಿದ ಕರುಗಳಿಗೆ ಹೆಸರಿಡುವುದೇ ನಮಗೊಂದು ಸಂಭ್ರಮ. ಮೊದಲು ಹುಟ್ಟಿದವಳೇ ”ಚಿನ್ನಿ”. ಹೆಸರಿಗೆ ತಕ್ಕಂತೆ ಚಿನ್ನದಂತಹ ಹಸು. ನಮ್ಮಿಂದ ಹೆಚ್ಚಿನ ಕೊಂಡಾಟವನ್ನು ಅಪೇಕ್ಷಿಸದ ಅವಳಿಗೆ ತನ್ನ ಕಣ್ಣುಗಳಲ್ಲಿ ಉಕ್ಕುವ ಪ್ರೀತಿಯನ್ನು ಮರೆಮಾಚಲು ಗೊತ್ತಿರಲಿಲ್ಲ. ಅನಂತರ ಪುಟ್ಟಿ…ಬಂಗಾರಿ …ಹೀಗೆ ಸುಮಾರು ಕರುಗಳಾದವು. ಮೊದಲ ಎರಡು ತಿಂಗಳು ಕರುಗಳೆಲ್ಲ ಮನೆಯ ಒಳಗೇ ವಾಸ. ಮನೆಯೊಳಗೆ ಅವಕ್ಕೆ ಬೇಕಾದಲ್ಲಿ ಹೋಗಿ ಕೂರುವುದು, ಮಲಗುವುದು ಮಾಡುತ್ತಿದ್ದವು. ಮುಸ್ಸಂಜೆಗೆ ಎಲ್ಲರೂ ಕೂತು ದೇವರ ಭಜನೆ, ಶ್ಲೋಕ ಹೇಳುವಾಗ ನಮ್ಮ ಬಳಿಯೇ ಬಂದು ಅಂಟಿ ಕೂರುತ್ತಿದ್ದವು. ರಾತ್ರಿ ಚಾಪೆ ಹಾಸಿ ಮಲಗುವಾಗ ನಮ್ಮ ಚಾಪೆಯಲ್ಲೇ ಬಂದು ಮಲಗುತ್ತಿದ್ದವು. ಆದರೆ ಅಸಲಿ ಆಟ ಶುರುವಾಗಿದ್ದೇ ಚಿನ್ನಿ ಕರು ಹಾಕಿದ ನಂತರ.ಆವರೆಗಿನ ಎಲ್ಲಾ ಕರುಗಳೂ ಊರಿನ ತಳಿಯವಾಗಿದ್ದರೆ, ಚಿನ್ನಿ ಹಾಕಿದ ಕರು ಬೇರೆ ತಳಿ. ಉದ್ದಉದ್ದ ಕೈ..ಕಾಲಿನ, ದೊಡ್ಡ ದೊಡ್ಡ ಕಿವಿಯ, ನೀಲಿಕಣ್ಣಂಚಿನ, ಇಟ್ಟಿಗೆಬಣ್ಣದ, ಹಣೆಯ ಮೇಲೆ ಎರಡು ಬಿಳಿಯ ಬೊಟ್ಟುಳ್ಳ, ಬೆಣ್ಣೆಯಂತೆ ನುಣುಪಾದ ಕೂದಲಿನ, ಮುದ್ದು ಮುದ್ದಾಗಿ ಓಡಾಡುತ್ತ ನಮ್ಮ ಮಡಿಲಿನಲ್ಲೇ ಎಂಬಂತೆ ಬಂದು ಕೂರುತ್ತಿದ್ದ ಸುಂದರಿ ಕರುವಿಗೆ ನಾವೆಲ್ಲರೂ ಒಮ್ಮತದಿಂದ ಇಟ್ಟ ಹೆಸರು “ಸಿಂಗಾರಿ”.ನಾವೆಲ್ಲರೂ ಆಕೆ ಧರೆಗಿಳಿದ ಶಾಪಗ್ರಸ್ತ ಅಪ್ಸರೆಯೇನೋ ಎಂಬಂತೆ ಅವಳ ಮೋಹಕ್ಕೆ ಒಳಗಾಗಿದ್ದೆವು. ಸಂಜೆ ಶಾಲೆ ಬಿಟ್ಟಾಗ ಎಲ್ಲಿಯೂ ನಿಲ್ಲದೆ ಓಡೋಡಿ ಬಂದು ಅವಳ ಜೊತೆ ಆಟಕ್ಕೆ ಬೀಳುತ್ತಿದ್ದೆವು. ಸ್ವಲ್ಪ ಸಮಯದ ನಂತರ ಮನೆ ಬಿಟ್ಟು ಆಕೆ ಹಟ್ಟಿಗೆ ಶಿಫ್ಟ್ ಆದಮೇಲೆ ನಾವೆಲ್ಲ ನಮ್ಮ ನಮ್ಮ ಕೆಲಸಗಳಲ್ಲಿ ತೊಡಗಿಸಿಕೊಳ್ಳತೊಡಗಿದರೆ ಕೊನೆಯವನಾದ ನನ್ನ ತಮ್ಮ, ಅವಳ ಜೊತೆ ಹಟ್ಟಿಗೇ ಶಿಫ್ಟ್ ಆಗಿಬಿಟ್ಟಿದ್ದ. ಸಂಜೆ ಹೊತ್ತು ಶಾಲೆ ಮುಗಿಸಿ ಬಂದು, ತಿನ್ನಲು ಹಾಳುಮೂಳುಗಳೆಲ್ಲಾ ಇರದ ಆ ದಿನಗಳಲ್ಲಿ, ಬೆಲ್ಲ ತಿನ್ನುವುದು ಅಭ್ಯಾಸ ಮಾಡಿಕೊಂಡಿದ್ದ ಆತ,ತನ್ನ ಅಂಗಿಯ ಕಿಸೆ ತುಂಬಾ ಬೆಲ್ಲದ ಚೂರುಗಳನ್ನು ತುಂಬಿಕೊಂಡು ಹೋಗಿ ದನಗಳಿಗೆ ಹುಲ್ಲು ಹಾಕುವ ಬೈಪಣೆಯಲ್ಲಿ ಮಲಗಿಬಿಡುತ್ತಿದ್ದ. ಅವನ ಕೆನ್ನೆ,ಮುಖ, ಕೈಯನ್ನೆಲ್ಲಾ ನೆಕ್ಕುತ್ತಿದ್ದ ಚಿನ್ನಿ ಮತ್ತು ಸಿಂಗಾರಿ ಬೆಲ್ಲದ ಪರಿಮಳಕ್ಕೆ ಕಿಸೆಯೊಳಗೇ…… ನಾಲಿಗೆ ಹಾಕಿ ಬೆಲ್ಲ ಖಾಲಿ ಮಾಡುತ್ತಿದ್ದವು. ಕಾಲ ಸರಿದಂತೆ ಕರುವಾಗಿದ್ದ ಸಿಂಗಾರಿ ದನವಾಗಿ ತಾನೇ ಕರು ಹಾಕತೊಡಗಿದಾಗ, ನಮಗೋ ಅವುಗಳಿಗೆ ಹೆಸರಿಡುವುದೇ ಒಂದು ಸಂಭ್ರಮ. ರಾಜ…ಭೋಜ ಇನ್ನೂ ಏನೇನೋ.. ನಮ್ಮ ಮೂರು ಜನ ಮಕ್ಕಳ ಬದುಕು ರೂಪಿಸುವ ಜವಾಬ್ದಾರಿ ಹೊತ್ತ ನಮ್ಮ ಅಮ್ಮನ ಹೊರೆ ಹೆಚ್ಚಾಗಿದ್ದುದರಿಂದ ಖರ್ಚಿನ ನಿರ‍್ವಹಣೆಗೂ ನಾವು ಜಾನುವಾರುಗಳನ್ನು ಅವಲಂಬಿಸಿದ್ದೆವು. ಮೂರು ಹೊತ್ತೂ ಹುಲ್ಲು ಹೆರೆದು ಹಾಕಿ ಸಾಕಲು ಕಷ್ಟವಾಗುತ್ತಿದ್ದರಿಂದ ಹಗಲು ಹೊತ್ತು ಗುಡ್ಡೆಗೆ ಹೋಗಿ ತಾವೇ ಮೇಯಲು ಬಿಟ್ಟುಬಿಡುತ್ತಿದ್ದೆವು. ದಿನವಿಡೀ ಮೇದು ಸಂಜೆಗೆ ಮನೆಗೆ ಮರಳುತ್ತಿದ್ದವು. ನಮ್ಮ ಚಿನ್ನಿ ನಾಯಕತ್ವದ ದನಗಳ ಗುಂಪು. ಆದರೆ ಎಲ್ಲರಂತಲ್ಲದ ನಮ್ಮ ಸಿಂಗಾರಿ ಈ ವಿಷಯದಲ್ಲಿ ಹೇಗೆ ಎಲ್ಲರಂತೆ ಆದಾಳು?ಹಗಲು ಮೇಯುವಾಗ ಅವಳಿಗೆ ಹೊಟ್ಟೆತುಂಬುತ್ತಿರಲಿಲ್ಲವೋ,..ಅಲ್ಲ ಬೇಕೆಂದೇ ಚೇಷ್ಟೆ ಮಾಡುತ್ತಿದ್ದಳೋ…..?ಕೆಟ್ಟಬುಧ್ಧಿಯೊಂದು ಕಲಿತುಬಿಟ್ಟಳು. ಸಂಜೆ ಎಲ್ಲರೊಂದಿಗೆ ಮನೆಗೆ ಬರದೆ, ಎಲ್ಲಾದರೂ ಮರೆಯಲ್ಲಿ ಕಾದಿದ್ದು, ಹಗಲು ಗುರುತು ಮಾಡಿಕೊಂಡಿರುವ ಜಾಗಕ್ಕೆ ರಾತ್ರಿ ಹೋಗಿ ಮೇದು,ನಡುರಾತ್ರಿಯಲ್ಲಿ ವಾಪಾಸಾಗುತ್ತಿದ್ದಳು.ಅದೂ ಇಡೀ ಊರಿಗೇ ಕೇಳುವಂತೆ ಶಂಖ ಊದಿದಂತೆ ಕೂಗಿಕೊಂಡು. ಕ್ರಮೇಣ ದಿನ ಕಳೆದಂತೆ ಫಸಲು ಕಳೆದುಕೊಂಡ ಒಬ್ಬೊಬ್ಬರೇ ಬಂದು ಅಮ್ಮನಲ್ಲಿ ದೂರು ಹೇಳಲು ಸುರುಮಾಡಿದರು. ಕಟ್ಟಿ ಹಾಕಿ ಸಾಕುವ ಸಾಧ್ಯತೆಗಳೇ ಇಲ್ಲದೆ ಅಮ್ಮ ಒಳಗಿಂದೊಳಗೇ ಪೇಚಾಡತೊಡಗಿದರು. ಕಡೆಗೂ ಅವಳನ್ನು ಯಾರಾದರೂ ಸಾಕಿಕೊಳ್ಳುವವರಿಗೆ ಕೊಡುವುದು ಎಂದು ತೀರ‍್ಮಾನವಾದಾಗ ಹೊಟ್ಟೆಯೊಳಗೆ ಆದ ಸಂಕಟವನ್ನು ನಾನು ಇವತ್ತಿಗೂ ಅನುಭವಿಸಬಲ್ಲೆ. ಪೇಟೆಯಲ್ಲಿ ಅಪ್ಪನ ಅಂಗಡಿ ಸಮೀಪದ ಮನೆಯವರು ಬಂದು ಅವಳನ್ನು ಕರೆದೊಯ್ಯುವಾಗ ನಾವು ಮನೆಯಲ್ಲಿರಲಿಲ್ಲಮರುದಿನ ಅಂಗಡಿಗೆ ಹೋದ ಅಪ್ಪ ರಾತ್ರಿ ಮರಳುವಾಗ ಮಾಮೂಲಿನಂತಿರಲಿಲ್ಲ. ಏನೆಂದು ವಿಚಾರಿಸಿದಾಗ ಅವರು ಹೇಳಿದ್ದು, “ಸಿಂಗಾರಿ ಅಂಗಡಿ ಬಳಿ ಬಂದವಳು ಸಂಜೆವರೆಗೂ ಹೋಗಲೇಇಲ್ಲ. ಅಂಗಡಿ ಬಾಗಿಲಲ್ಲೇ ಮಲಗಿದ್ದಳು”ಎಂದು.ನಮಗೆಲ್ಲ ಹೃದಯ ಗಂಟಲಲ್ಲಿ ಸಿಕ್ಕಿಹಾಕಿಕೊಂಡ ಅನುಭವ. ಹೊಟ್ಟೆಯಲ್ಲಿ ಅದೇನೋ ಕಿಚಿಪಿಚಿ.ಮರುದಿನ ಅಪ್ಪ ಅಂಗಡಿಗೆಹೊರಟಾಗ, ಆವತ್ತಿನ ತಿಂಡಿಯದೊಂದು ಪೊಟ್ಟಣ ಕಟ್ಟಿ ಅಮ್ಮ, ಅಪ್ಪನ ಕೈಗಿತ್ತು”ಸಿಂಗಾರಿಗೆ ತಿನ್ನಿಸಿ “ಎಂದಾಗ ಆಕೆಯ ಕಣ್ಣಂಚಿನಲ್ಲಿ ನೀರು ಜಿನುಗಿದ್ದನ್ನು ಆಕೆಗೆ ನಮ್ಮಿಂದ ಮರೆಮಾಚಲಾಗಲಿಲ್ಲ ಎಂಬುವುದು ನನಗೆ ಇಂದಿಗೂ ನೆನಪಿದೆ. ಇವತ್ತಿನ ಆಧುನಿಕತೆಯ ನಾಗಾಲೋಟದ ನಡುವೆಯೂ ಹಟ್ಟಿಯಲ್ಲಿರುವ ಹಸುಕರುಗಳಿಗೆ ಹೆಸರಿಟ್ಟು, ಅವುಗಳ ಜೊತೆಗೆ ಕುಣಿದು ಸಂಭ್ರಮಿಸುವ ನನ್ನ ಮಗಳನ್ನು ನೋಡಿದರೆ, ಸಧ್ಯ ನಾನೂ ನನ್ನ ಗೆಳತಿಯಂತೆ ಸಿಟಿವಂತಳಾಗದೇ ಉಳಿದೆನಲ್ಲಾ ಎಂದು ಸಮಾಧಾನವಾದರೂ…….ಕಾಮನ್ಸೆನ್ಸ್ ಇಲ್ಲದ, ಹಳ್ಳಿಗರು ಎಂದರೆ ತಾತ್ಸಾರ ಮಾಡುವ ಸಿಟಿಯವರನ್ನು ನೆನೆದರೆ ಮರುಕ ಹುಟ್ಟುತ್ತದೆ.*************

ಇತರೆ Read Post »

ಕಾವ್ಯಯಾನ, ಗಝಲ್

ಕಾವ್ಯಯಾನ

ಗಝಲ್ ಮಾಲತಿ ಹೆಗಡೆ ನೂರು ಆಸೆ ನೂರು ಕನಸ ಹತ್ತಿಕ್ಕುತ ನಡೆದೆಯೇಕೆ?ಕೋಪತಾಪದಲ್ಲಿ ಬಳಲಿ ಬಿಕ್ಕುತ್ತ ನಡೆದೆಯೇಕೆ? ಹೆತ್ತ ಕೂಸಿನ ವಾತ್ಸಲ್ಯವ ಕಳಚಿ ನಿರ್ಮೋಹ ಮೆರೆದೆಉತ್ತರ ಕೊಡದ ಮೌನ ಕಕ್ಕುತ್ತ ನಡೆದೆಯೇಕೆ? ಸಿಕ್ಕ ಬದುಕ ಕಟ್ಟಲರಿಯದೇ ಸಿಕ್ಕು ಸಿಕ್ಕಾಗಿಸಿ ಸೊರಗಿದೆನಕಾರಾತ್ಮಕ ವಿಚಾರದಲ್ಲೇ ಸೊಕ್ಕುತ್ತ ನಡೆದೆಯೇಕೆ? ಹುಟ್ಟಿದವರಿಗೆಲ್ಲ ಒಂದು ದಿನ ಬರುವುದು ಸಾವು ನಿಶ್ಚಿತಅರೆ ಆಯುಷ್ಯದಲ್ಲೇ ಸೋಲು ಮುಕ್ಕುತ್ತ ನಡೆದೆಯೇಕೆ? ಮುದ್ದುಕಂದನಿಗೆ ಅಮ್ಮನಾಗಿ ಹೆಮ್ಮೆಯ ದೇವತೆಯಾಗಿದ್ದೆನಕ್ಷತ್ರವಾಗುವ ಹುಚ್ಚಿನಲಿ ನೋಯುತ್ತ ನಡೆದೆಯೇಕೆ? ************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕೌದಿ ಸ್ಮಿತಾ ರಾಘವೇಂದ್ರ ಮಂಚದ ಅಂಚಿನ ಮೂಲೆಯಲ್ಲೋನಾಗಂದಿಗೆಯ ಹಾಸಿನಲ್ಲೋತುಕ್ಕು ಹಿಡಿದ ಟ್ರಂಕಿನೊಳಗೋ ಭದ್ರವಾಗಿಯೇ ಇರುವ ಗಂಟು. ಆಗಾಗ ಸುಮ್ಮನೇ ಎಳೆದು ತಂದುಗಂಟಿಗೆ ಕೈ ಹಚ್ಚಿದಾಗೆಲ್ಲತರಾತುರಿಯ ಕೆಲಸವೊಂದು ಹಾಜರುಸಮಯ ಹೊಂದಿಸಿಕೊಂಡುಬಿಚ್ಚಿಕೊಳ್ಳುತ್ತವೆ ರಾಶಿ ರಾಶಿ ನೆನಪುಹರಿದಿಲ್ಲ,ಹುಕ್ಕು ಕಿತ್ತಿಲ್ಲ,ಮಾಸಿದ್ದೂ ಇಲ್ಲಮುದ್ದೆಯಾದ ಗೆರೆಗಳ ತುಂಬಆಪ್ಯಾಯ ಕಂಪುಮತ್ತೆ ಹೆಗಲೇರುವ ಒನಪು ಸಂಜೆ ಹೊತ್ತಿಗೆ ಸಾಕೆನ್ನಿಸುತ್ತದೆಇಳಿಸಂಜೆಯ ಬದುಕಿನಂತೆ.ಬಿಡಿಸಿಕೊಳ್ಳಲಾಗದ ನಂಟಿನಂತೆ ಬಣ್ಣ ಬಣ್ಣದ ಅರಿವೆಗಳ ಅರಿಯಬೇಕುಇನ್ನೂಬದುಕು ಸವೆದ ಪುಟಗಳ ಮಸುಕು ಅಕ್ಷರಗಳಂತೆತೊಟ್ಟು ಸಂಭ್ರಮಿಸಿದ ಹಲವು ಭಾವಬಿಡಲಾಗದು ಬಳಸಲಾಗದುಆದರೂ ಇರಬೇಕು ಜೊತೆಯಾಗಿಮುದುಡಿದ ಕನಸುಗಳು. ಹೊಸ ಭಾವ ತುಂಬುವ ಹುರುಪಿನಲಿಯಾವುದೋ ಗಳಿಗೆಯಲ್ಲಿಕತ್ತರಿಗೆ ಸಿಕ್ಕು ಚಂದನೆಯ ಚೌಕ ಚೌಕಮತ್ತೆ ಜೋಡಿಸಿ ಅಂದ ನೋಡುವಸಿಂಪಿಯ ಉತ್ಸಾಹ ವಿಶಾಲವಾಗಿ ಹರಡಿಕೊಂಡಹಳೆಯ ಹೆಂಚಿನ ಮನೆಯಂತೆಆಪ್ತ ಆಪ್ತಕಳೆದ ಬದುಕನ್ನೇಬರಸೆಳೆದು ಹುದುಗಿಸಿಮೆತ್ತಗಾಗಿಸುತ್ತವೆಪ್ರತೀ ರಾತ್ರಿ.ನೀಟಾದ ಎಳೆಗಳು ಹೇಳುತ್ತವೆಮತ್ತೆ ಮತ್ತೆ ಹೊಲಿ ಬದುಕ ಕೌದಿಯಂತೆ. *************

ಕಾವ್ಯಯಾನ Read Post »

ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ದೃಷ್ಟಾಂತದ ಮೂಲಕ ನೀತಿಯ ಬೋಧನೆ. ಸೋಮೇಶ್ವರ ಶತಕ ಕೃತಿ : ಸೋಮೇಶ್ವರ ಶತಕಪುಲಿಗೆರೆ ಸೋಮನಾಥ.ಕನ್ನಡ ಸಾಹಿತ್ಯ ಪರಿಷತ್ತು.ಚಾಮರಾಜಪೇಟೆ.ಬೆಂ.ಮರು ಮುದ್ರಣ:೨೦೨೦.ಬೆಲೆ :೬೦. ಪುಸ್ತಕ ಪರಿಚಯ: ಕೃತಿ: *ಸೋಮೇಶ್ವರ ಶತಕಪುಲಿಗೆರೆಯಸೋಮನಾಥ ನಾವೆಲ್ಲಾ ಶಾಲೆಯಲ್ಲಿ ಕಲಿಯುವಾಗ ಕನ್ನಡ ಪಠ್ಯಪುಸ್ತಕದಲ್ಲಿ ‘ ಹರಹರಾ ಶ್ರೀಚೆನ್ನ ಸೋಮೇಶ್ವರ ‘ ಎಂದು ಕೊನೆಗೆ,ಮತ್ತೆ ಮತ್ತೆ ರಾಗವಾಗಿ ಹಾಡುವ ಪದ್ಯಗಳನ್ನು ಓದಿಯೇ ಇದ್ದೇವೆ.ಈಗಲೂ ಒಂದರಿಂದ ಹನ್ನೆರಡನೆ ತರಗತಿಯ ವರೆಗಿನ ಕನ್ನಡ ಪಠ್ಯದಲ್ಲಿ, ಎರಡು ಮೂರು ಪಠ್ಯಗಳಲ್ಲಾದರೂ ಈ ಬಗೆಯ ಪದ್ಯಗಳಿವೆ.ಇವು ಪುಲಿಗೆರೆ ಸೋಮೇಶ್ವರನ ಶತಕದಿಂದ ಆರಸಿ ಇಡುತ್ತಿದ್ದ ಪದ್ಯಗಳು.ಬಿಡಿ ಬಿಡಿಯಾಗಿರುವ ಈ ಪದ್ಯಗಳು ನೀತಿಬೋಧಕವಾದವು. ದೃಷ್ಟಾಂತಗಳ ಮೂಲಕ ಸರಿ ತಪ್ಪುಗಳನ್ನು,ಸಾಮಾಜಿಕ ನಡವಳಿಕೆಯನ್ನು ತಿಳಿಸುವ ಅಲಿಖಿತವಾದ ಜನಮಾನಸದ ಶಾಸನಗಳಂತಿರುವ ಪದ್ಯಗಳು ಇವು. ಹಾಗೆ ನೋಡಿದರೆ ನಮ್ಮ ಹಲವು ಜನಪದ ತ್ರಿಪದಿಗಳು,ಗಾದೆಗಳೂ,ಶರಣರ ನುಡಿಗಳು,ಸರ್ವಜ್ಞನ ವಚನಗಳು,ಕೀರ್ತನೆಕಾರರ ನುಡಿಗಳು..ಇವೆಲ್ಲಾ ಬಹುಪಾಲು ಸಾಮಾಜಿಕ ಧಾರ್ಮಿಕ ನಡಾವಳಿಗಳನ್ನು ಕುರಿತು ಹೇಳುತ್ತಲೇ,ಮಾರ್ಗದರ್ಶಿಯೂ ಚಿಂತನೆಗೆ ಹಚ್ಚುವವೂ ಆಗಿವೆ. “ಸೋಮೇಶ್ವರ ಶತಕ ” ರಚನೆಕಾರ ಪುಲಿಗೆರೆ ಸೋಮೇಶ್ವರ ಅಥವಾ ಪಾಲ್ಕುರಿಕೆ ಸೋಮೇಶ್ವರನೇ ಎಂಬ ಗೊಂದಲವಿದೆ.ಹನ್ನೆರಡನೆ‌ ಶತಮಾನದ ಅಂತ್ಯದಲ್ಲಿದ್ದ ಪಾಲ್ಕುರಿಕೆ ಸೋಮನಾಥನು ಸಂಸ್ಕೃತ, ತೆಲುಗು,ಕನ್ನಡ ಮೂರು ಭಾಷೆಗಳಲ್ಲೂ ಪಾಂಡಿತ್ಯ ಪಡೆದವನಾಗಿದ್ದ.ಆದರೆ,ಇವನು ಗೋದಾವರಿ ಪ್ರಾಂತ್ಯದಲ್ಲಿದ್ದನೆಂದು,ಇವನಿಂದ‌ ಇದು ರಚಿತವಾಗಿಲ್ಲವೆಂದು ಕವಿಚರಿತೆಕಾರರು ಹೇಳಿದ್ದಾರೆ.ಮತ್ತೊಬ್ಬರು, ಪುಲಿಗೆರೆ ಸೋಮನಾಥ. ಸುಮಾರು ಹದಿನಾರನೇ ಶತಮಾನ.ಧಾರವಾಡದ ಜಿಲ್ಲೆ,ವೀರಶೈವ ಕವಿಯಾಗಿದ್ದವನು.ಕೃತಿಯಲ್ಲಿ‌ಸೋಮ‌ ಎಂದಷ್ಟೇ ಕವಿ ಹೆಸರಿದೆ.ಈ ಧಾರವಾಡದ ಕವಿ ಪುಲಿಗೆರೆ ಸೋಮನಾಥನೇ‌ ಶತಕದ ಕವಿಯೆಂದು ವಿದ್ವಾಂಸರು ಊಹಿಸಿದ್ದಾರೆ. ಶತಕವೆಂದರೆ ನೂರು.ಆರಂಭದ ಸ್ತುತಿ ಮತ್ತು ಅಂತ್ಯದ ಶತಕದ ಉಪಯೋಗ ತಿಳಿಸುವ ಪದ್ಯಗಳನ್ನು ಸೇರಿಸಿ,ಒಟ್ಟು ನೂರ ಮೂರು ಪದ್ಯಗಳು ಇದರಲ್ಲಿವೆ.ಮೊದಲ ಮತ್ತು ಕೊನೆಯ ಪದ್ಯಗಳು ಸ್ರಗ್ಧರಾ ವೃತ್ತದಿಂದ ಕೂಡಿದ್ದು,ಉಳಿದವು ಮತ್ತೇಭವಿಕ್ರೀಡಿತವೆಂಬ ವೃತ್ತ ಪದ್ಯಗಳಲ್ಲಿ ರಚನೆಯಾಗಿವೆ. ” ಸೋಮೇಶ್ವರ ಶತಕ” ಕೃತಿಯ ಸಂಪಾದನೆ ಬಹಳ ಅರ್ಥಪೂರ್ಣವಾಗಿದೆ.ಪದ್ಯಗಳು, ಅವುಗಳಿಗೆ ಭಾವಾರ್ಥ,ಟಿಪ್ಪಣಿ,ಜೊತೆಗೆ ಆ ಪದ್ಯಗಳಲ್ಲಿ ಉಲ್ಲೇಖಿಸಿರುವ ಕಥಾ ಎಳೆಗಳು ತಿಳಿಯದವರಿಗೆ ಪೂರ್ಣ ವಾಗಿ ತಿಳಿಯಲಿ ಎಂಬ ಆಶಯದೊಂದಿಗೆ ನೀಡಿರುವ ಮುವತ್ತು ಮೂಲಕಥೆಗಳನ್ನು ಪುಸ್ತಕದ ಕೊನೆಯಲ್ಲಿ ನೀಡಲಾಗಿದೆ.ಹಾಗಾಗಿ,ಶಿಕ್ಷಕರಿಗೆ,ವಿದ್ಯಾರ್ಥಿಗಳಿಗೆ, ಓದುಗರೆಲ್ಲರಿಗೂ ಯಾವುದೇ ಗೊಂದಲವಿಲ್ಲದೆ ಸರಳವಾಗಿ ಗ್ರಹಿಸಲು ಉಪಯುಕ್ತವಾಗಿ ರೂಪಿಸಿಕೊಡಲಾಗಿದೆ. ಸೋಮೇಶ್ವರ ಶತಕದ ಪದ್ಯಗಳು ಎಷ್ಟು ಜನಪ್ರಿಯವಾದವು ಎಂದರೆ; ಎಳೆಗರು ಎತ್ತಾಗದೆ,ಬಡವಂ ಬಲ್ಲಿದನಾಗನೆ,ಹಲವು ಹಳ್ಳ ಸೇರಿ ಸಮುದ್ರವಾಗದೆ,ಮಡಿಯೆ ನಿರ್ಮಲ‌ ಚಿತ್ತ…ಹೀಗೆ ಗಾದೆಗಳಂತೆ,ನಾಣ್ನುಡಿಗಳಂತೆ ರೂಢಿಗತವಾಗಿ ಬಳಸುವ ಮಾತುಗಳಾಗಿವೆ. ಈ ಶತಕದ ಪದ್ಯಗಳು ನಾಲ್ಕು ಸಾಲಿನಲ್ಲಿದ್ದು ಕೆಲವು ದೃಷ್ಟಾಂತಗಳ ಮೂಲಕ ನೀತಿ, ತಿಳುವಳಿಕೆ ‌ಹೇಳುತ್ತವೆ. ” ಉಣದಿರುವ ಧನಮಿರ್ದೊಡೇನು,ಸುತನಿರ್ದೇಂ‌ ಮುಪ್ಪಿನಲ್ಲಾಗದಾ,ಒಣಗಲ್ಪೈರಿಗೆ ಬಾರದಿರ್ದ ಮಳೆ ತಾಂ‌ ಬಂದೇನದಾಪತ್ತಿನೊಳ್ ಮಣಿದುಂ‌ ನೋಡದ ಬಂಧುವೇತಕೆಣಿಸಲ್ ಕಾಲೋಚಿತಕ್ಕೈದಿದ ತೃಣವೇ ಪರ್ವತವಲ್ಲವೇ‌ ಹರಹರಾ ಶ್ರೀಚೆನ್ನ ಸೋಮೇಶ್ವರ.!”(೧೬) ಉಪಯೋಗಿಸದಿರುವ ಹಣವೂ,ಮುಪ್ಪಿನಲ್ಲಿರುವ ತಂದೆ ತಾಯಿಯನ್ನು ನೋಡದ ಮಗನೂ,ಪೈರು ಒಣಗುವಾಗ ಬಾರದ‌ ಮಳೆಯೂ,ಕಷ್ಟಕಾಲದಲ್ಲಿಯೂ ಬಂದು ವಿಚಾರಿಸಿಕೊಳ್ಳದ ನಂಟರೂ ಇದ್ದು ಪ್ರಯೋಜನವಿಲ್ಲ‌.ಉಪಯೋಗವಿಲ್ಲ.ಆದುದರಿಂದ ಸಮಯಕೆ ಸರಿಯಾಗಿ ಒದಗಿದ ಹುಲ್ಲುಕಡ್ಡಿಯೂ,ಅಂದರೆ‌ ಸಣ್ಣ‌ಸಹಾಯವೂ ಪರ್ವತಕ್ಕೆ ಸಮಾನವಾದುದು.ಹೀಗೆ ಸಾಮಾಜಿಕ ಜೀವನದ ವಿವರಗಳನ್ನೇ ಉದಾಹರಿಸುತ್ತಾ ಸರಿ ತಪ್ಪುಗಳ, ಒಳಿತು ಕೆಡಕುಗಳ ವಿಚಾರ ಮಾಡಿದ್ದಾನೆ‌ ಕವಿ. ” ಮದನಂ ದೇಹವ ನೀಗಿದಂ,ನೃಪವರಂ ಚಂಡಾಲಗಳಾದ,ಪೋದುದು ಬೊಮ್ಮಂಗೆ ಶಿರಸ್ಸು,ಭಾರ್ಗವನು ಕಣ್ಗಾಣಂ,ನಳಂ‌ ವಾಜಿಪಂ,ಸುಧೆಯಂ‌ ಕೊಟ್ಟು ಸುರೇಂದ್ರ ಸೋಲ್ತ,ಸತಿಯಂ ಪೋಗಾಡಿದಂ ರಾಘವಂ,ವಿಧಿಯಂ ಮೀರುವನಾವನೈ ಹರ ಹರಾ ಶ್ರೀ ಚೆನ್ನ ಸೋಮೇಶ್ವರ. “(೨೭) ಮನ್ಮಥನು ದೇಹವನ್ನೇ ಕಳೆದುಕೊಂಡನು,ರಾಜಶ್ರೇಷ್ಠನಾದ ಹರಿಶ್ಚಂದ್ರನು ಚಂಡಾಲನಿಗೆ ದಾಸನಾದನು,ಬ್ರಹ್ಮನಿಗೆ ಒಂದು ತಲೆಯೇ ಹೋಯಿತು.ಶುಕ್ರಾಚಾರ್ಯರಿಗೆ ಒಂದು ಕಣ್ಣು ಹೋಯಿತು.ನಳ‌ ಮಹಾರಾಜನು ಕುದುರೆಯ ನೋಡಿಕೊಂಡಿರಬೇಕಾಯಿತು,ಇಂದ್ರನು ಅಮೃತವನ್ನು ಕಳೆದುಕೊಂಡು ಯುದ್ದದಲ್ಲಿ ಸೋತು ಹೋದನು,ಶ್ರೀರಾಮನು ತನ್ನ ಹೆಂಡತಿಯನ್ನು ಕಳೆದುಕೊಂಡನು…ಹೀಗಿರುವಾಗ ಲೋಕದಲ್ಲಿ ದುರಾದೃಷ್ಟವನ್ನು ಮೀರಲು ಯಾರಿಗೆ ಸಾಧ್ಯ.ಎಲ್ಲರೂ ಬಂದುದನ್ನು ಅನುಭವಿಸಲೇಬೇಕು ಎಂದು ಕವಿ ಹೇಳುತ್ತಾನೆ.ಈ ಒಂದು ಪದ್ಯಭಾಗದಲ್ಲೇ ಏಳುಕಥೆಗಳ ಉಲ್ಲೇಖವಿದೆ.ಕಾಮ‌ ದಹನದ‌ ಕಥೆ,ಹರಿಶ್ಚಂದ್ರನ ಕಥೆ,ರಾಮಾಯಣದ ಕಥೆ,..ಹೀಗೆ ನಾಲ್ಕು ಪದ್ಯ ಗಳಲ್ಲೇ ಹಲವು ಕತೆಗಳ ನಿದರ್ಶನಗಳ ಮೂಲಕ ಅದೃಷ್ಟ ದುರಾದೃಷ್ಟ ನಮ್ಮ ಕೈಯಲಿಲ್ಲವೆಂದು ಕವಿ ಚಿತ್ರಿಸಿದ್ದಾನೆ. ಪಾಠ ಮಾಡುವಾಗ ಶಿಕ್ಷಕರು ಎಡವಬಾರದೆಂದು,ಮಕ್ಕಳೇ‌ ಓದುವಾಗ ಅವರಿಗೂ ತಿಳಿಯಲಿ ಎಂದು ಈ ಕೃತಿಯ ಸಂಪಾದಕರು ಈ ಎಲ್ಲಾ ಉಲ್ಲೇಖಿತ ಕಥಾ ಎಳೆಗಳನ್ನು ಹಿಡಿದು,ಅವುಗಳ ಮೂಲಕಥೆಗಳನ್ನು ಒದಗಿಸಿದ್ದಾರೆ.ಆ ಮೂಲಕ ಈ ಪುಸ್ತಕದ ಉಪಯುಕ್ತತೆ ಹೆಚ್ಚಾಗಿದೆ. ಈ ಶತಕದ ಪದ್ಯಗಳಲ್ಲಿರುವ ವಿಷಯವು ನೀತಿಬೋಧಕವೆಂದು ಆಗಲೇ‌ ಹೇಳಿದ್ದೇನೆ.ಆ ನೀತಿ,ಒಣ ಬೋಧನೆಯಂತಾಗಬಾರದೆಂದು ಕವಿ ಹೋಲಿಕೆ,ಉಪಮೆ,ದೃಷ್ಟಾಂತ ಗಳನ್ನು ನೀಡುತ್ತಾ ಅಂತಿಮವಾಗಿ ನೀತಿ ಹೇಳಿದ್ದಾನೆ.ಹೀಗಾಗಿ ಈ ಪದ್ಯಗಳು ಸೊಗಸಿನಿಂದ ಕೂಡಿದ್ದು,ಓದಿಸಿಕೊಳ್ಳುವ,ಸಂವಾದಿಸುವ ಸಾಮರ್ಥ್ಯ ಹೊಂದಿವೆ. ಮತ್ತೊಂದು ವಿಚಾರವೆಂದರೆ, ಈ ಪದ್ಯಗಳಲ್ಲಿರುವ ವಿಷಯಗಳೆಲ್ಲವೂ ಸಾರ್ವಕಾಲಿಕವಾದವೆ,ಪ್ರಗತಿಪರವೇ ಎಂದೇನಾದರೂ ಪ್ರಶ್ನೆ ಹಾಕಿಕೊಂಡರೆ,ಇಲ್ಲಿ,ಅನೇಕ ವಿಚಾರಗಳು ಎಲ್ಲ ಕಾಲಕ್ಕೂ ಬೇಕಾದತಂಹವು ಇವೆ.ಆದರೆ,ಕೆಲವು ವಿಚಾರಗಳು ಕವಿ ಬಾಳಿ ಬದುಕಿದ ಸಮಾಜದಲ್ಲಿ ಆಗ ಮಾನ್ಯತೆ ಪಡೆದಿದ್ದು,ಪ್ರಸ್ತುತದಲ್ಲಿ ಅವುಗಳು ಅರ್ಥ ಕಳೆದುಕೊಂಡಿವೆ.ಇವತ್ತಿನ ಸಮಾಜದಲ್ಲಿ ಅಂತಹ ವಿಷಯಗಳಿಗೆ ‌ಮೌಲ್ಯವಿಲ್ಲ.ನಿದರ್ಶನಕೆ ; ಹೀಗಾಗಲೇ ಉಲ್ಲೇಖಿಸಿರುವ ‘ಉಣದಿರ್ದ ಧನವಿದ್ದರೇನು ಪ್ರಯೋಜನ’ ಅಂತಹ ಪದ್ಯಗಳು ಎಲ್ಲಾ ಕಾಲ‌ಕ್ಕೂ ಸೂಕ್ತವಾದವು.ಆದರೆ,ವಿಧವೆ,ಒಂಟಿ ಬ್ರಾಹ್ಮಣ, ಜೈನ ಸಂನ್ಯಾಸಿ,ಅಂಗಹೀನನು…ಇವೆಲ್ಲವೂ ಅಪಶಕುನವಾದದ್ದು,ಇವುಗಳನ್ನು ಕಂಡಾಗ ನಿಪುಣರು ಹೊರಹೋಗುವುದಿಲ್ಲಾ ಎಂಬ ಮಾತು ಅವತ್ತಿನ ಸಾಮಾಜಿಕ ನಂಬಿಕೆ,ನಡವಳಿಕೆಯನ್ನು ಯಥಾ ಪ್ರಕಾರ ಬಿಂಬಿಸಿದಂತಿದೆ. ” ಧರೆ ಬೀಜಂಗಳ ನುಂಗೆ,ಬೇಲಿ ಹೊಲನೆಲ್ಲಂ‌ ಮೇದೊಡೆಂ,ಗಂಡ ಹೆಂಡಿರನತ್ಯುಗ್ರದಿ ಶಿಕ್ಷಿಸಲ್,ಪ್ರಜೆಗಳಂ ಭೂಪಾಲಕಂ ಭಾದಿಸಲ್,ತರುವೇ ಪಣ್ಗಳ ಮೆಲ್ಲೆ,ಮಾತೆ ವಿಷಮಂ ಪೆತ್ತರ್ಭಂಕಂಗೂಡಿಸಲ್,ಹರಂ‌ಕೊಲ್ಲಲ್ ಪರ ಕಾಯ್ವನೇ ಹರ ಹರಾ ಶ್ರೀಚೆನ್ನ ಸೋಮೇಶ್ವರ! “(೨೯) ಎಂಬ ಪದ್ಯದಲ್ಲಿ ರಕ್ಷಿಸಬೇಕಾದವರೇ ಭಕ್ಷಕರಾದರೆ ಯಾರು ರಕ್ಷಿಸಲು ಸಾಧ್ಯ ಎಂದು ಕವಿ ಕೇಳುತ್ತಾರೆ.ಬಸವಣ್ಣನ‌ ” ಒಲೆ ಹತ್ತಿ ಉರಿದರೆ ನಿಲ್ಲಬಹುದಲ್ಲದೆ,ಧರೆ ಹತ್ತಿ ಉರಿದರೆ ನಿಲಲಾಗದು” ವಚನವೂ ಇದೇ ನುಡಿಗಳನ್ನು ಹೇಳುತ್ತಾ,ಕಾಯುವವರೆ ಕೊಲ್ಲಲು ನಿಂತರೆ ಇನ್ಯಾರಿಗೆ ದೂರುವುದು ಎಂದು ಪ್ರಶ್ನಿಸುತ್ತದೆ‌.ಇಂತಹ ಹಲವಾರು ‌ಪದ್ಯಗಳು,ಗುರು,ಜ್ಞಾನ, ವಿದ್ಯೆ,ಹಣ,ಅಧಿಕಾರ,ಬಂಧು ಮಿತ್ರರು,ರಾಜ,ಮಂತ್ರಿ,ಅಧಿಕಾರಿಗಳಿಗಿರಬೇಕಾದ ಸಾಮರ್ಥ್ಯ.. ಹೀಗೆ ಇವುಗಳೆಲ್ಲದರ ಗುಣ ಲಕ್ಷಣ ಕುರಿತು ಆಡಿರುವ ನುಡಿಗಳು ಇವತ್ತಿಗೂ ಅನ್ವಯಿಸುತ್ತವೆ.ಮತ್ತು ಉಪಯುಕ್ತತೆ ಪಡೆದಿವೆ.ನಿದರ್ಶನಗಳ ಮೂಲಕ ಹೇಳುವುದರಿಂದ ಓದುಗ,ಕೇಳುಗರ‌ ಮನದಲ್ಲಿ ಉಳಿದು,ತಿಳುವಳಿಕೆಗೆ,ಚಿಂತನೆಗೆ ದೂಡುವ ಪದ್ಯಗಳಾಗಿವೆ.ಹಾಗಾಗಿ ಸೋಮೇಶ್ವರ ಶತಕವು ಮರುಓದಿಗೆ,ಪರಾಮರ್ಶನಕೆ ಒಳಗಾಗುತ್ತಲೇ ಇರುತ್ತದೆ. ಕವಿ ಪರಿಚಯ,ಪದ್ಯಗಳು,ಭಾವಾರ್ಥ,ಟಿಪ್ಪಣಿ,ಮೂಲಕಥೆಗಳು ಅಂದರೆ ಕಾಮದಹನದ ಕಥೆ,ಹರಿಶ್ಚಂದ್ರನ‌ ಕಥೆ,ಬಲಿಚಕ್ರವರ್ತಿಯ ಕಥೆ,ಅಹಲ್ಯೆಯ ಕಥೆ..ಹೀಗೆ ವಿನ್ಯಾಸಗೊಳಿಸಿ,ಸಿದ್ದಪಡಿಸಿರುವ ಸಂಪಾದಕರ ಶ್ರಮ ಮತ್ತು ಪಾಂಡಿತ್ಯಕ್ಕೆ ನಮಿಸಲೇಬೇಕಾಗುತ್ತದೆ.ಇಂತಹ ಪುಸ್ತಕವನ್ನು ಪುನರ್ ಮುದ್ರಣ ಮಾಡಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕೆಲಸ ಶ್ಲಾಘನೀಯ. ಆದರೆ,ಪುನರ್ ಮುದ್ರಣದಲ್ಲಿ ಸಂಪಾದಕರು ಯಾರು ಎಂದೇ‌ ತಿಳಿಯುತ್ತಿಲ್ಲಾ.ಅದನ್ನು ಇರುವುದು ಸಮಂಜಸವಲ್ಲ. ” ನೀತಿಯ ಕಟುತ್ವದ ಕಹಿ ಗುಳಿಗೆಗಳನ್ನು ಕಥೆಯ ಜೇನಿನಲಿ ಅದ್ದಿ ಉಣಿಸುವಆರೋಗ್ಯಕರ ನುಡಿಮುತ್ತುಗಳು ” ಈ ಶತಕದ ಪದ್ಯಗಳು. ********* ಡಾ.ಸುಜಾತಾ ಲಕ್ಷೀಪುರ

ಪುಸ್ತಕ ಸಂಗಾತಿ Read Post »

ಅಂಕಣ ಸಂಗಾತಿ, ಮುಖಾಮುಖಿ

ಅಕ್ಷರದ ಬಂಡಾಯ ತಲ್ಲಣಗಳಿಗೆ ಪ್ರತಿಕ್ರಿಯೆ ಬೇಕಾದ ಅನಿವಾರ್ಯತೆಯಲ್ಲಿ ಬರೆಯಲು ಮನಸ್ಸು ಮಾಡಿದೆ’ ಡಾ.ರಾಮಕೃಷ್ಣ ಗುಂದಿ ಡಾ.ರಾಮಕೃಷ್ಣ ಗುಂದಿ ಕನ್ನಡದ ಅತ್ಯಂತ ಪ್ರಭಾವಶಾಲಿ ಕತೆಗಾರರಲ್ಲಿ ಒಬ್ಬರು. ಅವಾರಿ ಅವರ ಪ್ರಸಿದ್ಧ ಕತೆ. ಅವರ ಮೊದಲ ಕಥಾ ಸಂಕಲನ ಅವಾರಿ ಹೆಸರಲ್ಲೇ ಪ್ರಕಟವಾಯಿತು. ಕಡಲ ಬೆಳಕಿನ ದಾರಿಯಲ್ಲಿ, ಸೀತೆದಂಡೆ ಹೂವೆ ಅವರ ಕಥಾ ಸಂಕನಲಗಳು. ಪ್ರಾಂಜಲ ಅವರು ವಿವಿಧ ಲೇಖಕರಿಗೆ ಬರೆದ ಮುನ್ನುಡಿಗಳ ಸಂಗ್ರಹ. ಆಗೇರರ ಬದುಕು ಮತ್ತು ಸಂಸ್ಕೃತಿ ಕುರಿತು ಅವರು ಸಂಶೋಧನಾ ಪ್ರಬಂಧ ಮಂಡಿಸಿ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪಡೆದಿದ್ದಾರೆ. ಅವರ ಆತ್ಮಕತೆ ಸಹ ಪ್ರಕಟವಾಗಿದೆ. ಯಕ್ಷಗಾನ ಕಲಾವಿದರೂ ಆಗಿರುವ ಡಾ.ಗುಂದಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಯಕ್ಷಗಾನ ಅಕಾಡಮಿಯ ಸದಸ್ಯರಾಗಿಯೂ ಕಾರ‍್ಯ ನಿರ್ವಹಿಸಿದ್ದಾರೆ. ಅಂಕೋಲಾದ ಜೆ.ಸಿ.ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸುಧೀರ್ಘ ಅವಧಿ ಕಾರ‍್ಯ ನಿರ್ವಹಿಸಿದ ಅವರು, ಕಾರವಾರದ ದಿವೇಕರ ಕಾಲೇಜಿನಲ್ಲಿ ಕೆಲ ವರ್ಷ ಪ್ರಾಂಶುಪಾಲರಾಗಿ ಕಾರ‍್ಯ ನಿರ್ವಹಿಸಿ ನಿವೃತ್ತಿಯಾಗಿದ್ದಾರೆ. ಅವರು ಅಂಕೋಲಾದ ನಾಡು ಮಾಸ್ಕೇರಿ ಬಳಿಯ ಗ್ರಾಮದವರು. ಈಗ ನೆಲಸಿರುವುದು ಅಂಕೋಲಾದಲ್ಲಿ. ಅವಾರಿ, ಕಡಲ ಬೆಳಕಿನ ದಾರಿಯಲ್ಲಿ, ಸೀತೆ ದಂಡೆ ಹೂವೆ, ಮಾನಿನಿ ಮಣಿಯೆ ಬಾರೆ ಅವರ ಬರೆದ ಅತ್ಯುತ್ತಮ ಕತೆಗಳ ಸಾಲಿಗೆ ಸೇರುವಂತಹವು. ಬಂಡಾಯ ಮತ್ತು ದಲಿತ ಸಾಹಿತ್ಯದ ಓದು ಅವರ ಕತೆಗಳನ್ನು ಪ್ರಭಾವಿಸಿದೆಯಾದರೂ, ಕರಾವಳಿಯಲ್ಲಿ ಶೋಷಣೆ, ಜಾತಿಯ ಮುಸುಕು, ಕಾಣುವ ದೌರ್ಜನ್ಯ ಕತೆಗಳಲ್ಲಿ ಅನಾವರಣಗೊಳ್ಳುವ ಬಗೆ ವಿಶಿಷ್ಟ. ಅವರ ಕತೆಗಳಲ್ಲಿ ಮಾನವೀಯ ಅನುಕಂಪ ಮತ್ತು ಮನುಷ್ಯನ ಸೂಕ್ಷ್ಮ ಪ್ರತಿಸ್ಪಂದನಗಳು ಎದ್ದು ಕಾಣುವಂತಹವು. …………………………. ನಾಗರಾಜ ಹರಪನಹಳ್ಳಿ : ಕತೆಗಳನ್ನು ಯಾಕೆ ಬರೆಯುತ್ತೀರಿ? ರಾಮಕೃಷ್ಣ ಗುಂದಿ : ನನ್ನ ಊರು ಕುಮಟಾ ತಾಲೂಕಿನ ನಾಡು ಮಾಸ್ಕೇರಿ ಎಂಬ ಪುಟ್ಟ ಗ್ರಾಮ. ನನ್ನ ಬಾಲ್ಯ ಮತ್ತು ಹರೆಯದ ಬಹುಪಾಲು ಅಲ್ಲಿಯೇ ಕಳೆದವು. ಅಂದಿನ ಅಲ್ಲಿಯ ಸಾಮಾಜಿಕ ಪರಿಸರ, ಜಾತಿ ವ್ಯವಸ್ಥೆ, ಮುಖಾಮುಖಿಯಾದ ವಿಕ್ಷಿಪ್ತ ಮತ್ತು ಉದಾತ್ತ ವ್ಯಕ್ತಿತ್ವಗಳು, ನನ್ನೊಳಗೆ ಉಂಟು ಮಾಡಿದ ತಲ್ಲಣಗಳಿಗೆ ಪ್ರತಿಕ್ರಿಯೆ ನೀಡಲೇ ಬೇಕಾದ ಅನಿವಾರ‍್ಯತೆಯಲ್ಲಿ ನಾನು ಬರೆಯಲು ಮನಸ್ಸು ಮಾಡಿದೆ ಮತ್ತು ಅದಕ್ಕೆ ಕಥೆಯೇ ಸೂಕ್ತವಾದ ಮಾಧ್ಯಮ ಅನ್ನಿಸಿತು. ಅದೇ ಸಮಯ ಆರಂಭವಾದ ದಲಿತ-ಬಂಡಾಯ ಚಳುವಳಿಯಿಂದಲೂ ಪ್ರಭಾವಿತನಾಗಿ ಕತೆ ಬರೆಯಲು ತೊಡಗಿದೆ. ಪ್ರಶ್ನೆ : ಕಥೆ ಹುಟ್ಟುವ ಕ್ಷಣ ಯಾವುದು? ಉತ್ತರ : ಸಂವೇದನಾ ಶೀಲತೆ ಇದ್ದರೆ ಬರಹಗಾರನಿಗೆ ಇಂಥಹುದೇ ಕ್ಷಣ ಎಂಬುದೇನಿಲ್ಲ. ಅಥವಾ ಅದು ನಿಜವೂ ಇರಬಹುದೇನೋ. ತೀರ ಮನಸ್ಸನ್ನು ಕಾಡುವ ಕ್ಷಣವೊಂದು ಅಭಿವ್ಯಕ್ತಿಯ ಉದ್ದೀಪನಕ್ಕೆ- ಪ್ರೇರಣೆಯಾಗುವ ಸಾಧ್ಯತೆಗಳೂ ಇಲ್ಲದಿಲ್ಲ. ನಮ್ಮೂರಿನ ಬಂಡಿಹಬ್ಬ ನೋಡಲು ನೂರಾರು ಜನರ ನಡುವೆ ನಿಂತಿದ್ದೆ, ಆಗ ದೇವರ ಮೋಕ್ತೇಸರ ಭಕ್ತ ಜಂಗುಳಿಯತ್ತ ತೆಂಗಿನ ಕಾಯಿ ಎಸೆಯುತ್ತಾನೆ. ಅದು ಯಾರ ಕೈಗೆ ಸಿಗುತ್ತದೋ ಅವರು ಬಂಡಿ ಕಟ್ಟೆಗೆ ಒಡೆಯುವ ಅವಕಾಶ ಪಡೆಯುತ್ತಾರೆ. ಅಲ್ಲಿ ಆಕಸ್ಮಿಕವಾಗಿ ದಲಿತ ಯುವಕನೋರ‍್ವನ ಕೈಗೆ ಕಾಯಿ ಸಿಕ್ಕಾಗ ಅದನ್ನು ಒಡೆಯಲು ಆತನಿಗೆ ಅವಕಾಶ ನೀಡದೆ ಸವರ್ಣೀಯನೊ  ಬ್ಬನ ಕೈಗೆ ನೀಡಿ ಕಾಯಿ ಒಡೆಯಲಾಯಿತು. ಈ ದೃಶ್ಯ ನನಗೆ ಆ ಕ್ಷಣದಲ್ಲಿ ತುಂಬ ಕಾಡಿತು. ಮತ್ತು ಅಂದೇ ನಾನು ‘ಚಾಚುದಾರರು’ ಎಂಬ ಕಥೆ ಬರೆಯಲೇ ಬೇಕಾಯಿತು. ದಲಿತನಾದ ನನಗೆ ಅಸ್ಪ್ರಶ್ಯತೆಯ ಕಾರಣದಿಂದ ನೋವು ನೀಡಿದ ಕ್ಷಣಗಳೇ ನನ್ನ ಹಲವು ಕಥೆಗಳ ಹುಟ್ಟಿಗೆ ಕಾರಣವೂ ಆಗಿದೆ. ಪ್ರಶ್ನೆ : ನಿಮ್ಮ ಕಥೆಗಳ ವಸ್ತು ವ್ಯಾಪ್ತಿ ಹೆಚ್ಚಾಗಿ ಯಾವುದು? ಪದೇ ಪದೇ ಕಾಡುವ ವಿಷಯ ಯಾವುದು? ಉತ್ತರ : ನಾನು ಆಗಲೇ ಹೇಳಿರುವಂತೆ ನನ್ನೂರಿನ ದಲಿತ ಕೇರಿಯ ಬಡತನ, ಹಸಿವು, ಅಸ್ಪ್ರಶ್ಯತೆಯ ಅವಮಾನಕರ ಪ್ರಸಂಗಗಳು ಇದೇ ಕಾರಣದಿಂದ ಅನಿವಾರ‍್ಯವಾಗಿ ಅನುಭವಿಸುವ ಶೋಷಣೆ ಮುಂತಾದವುಗಳೇ ನನ್ನ ಕಥೆಗಳಿಗೆ ವಸ್ತುವಾದವು. ಮುಖ್ಯವಾಗಿ ಒಂದು ಉಪೇಕ್ಷಿತ ದಲಿತ ಸಮುದಾಯವಾಗಿ ಇಂದಿಗೂ ನಿರೀಕ್ಷಿತ ಪ್ರಗತಿ ಕಾಣದ ನಮ್ಮ ‘ಆಗೇರ’ ಜನಾಂಗದ ಧ್ವನಿಯಾಗಬೇಕೆಂಬ ಉತ್ಕಟ ಹಂಬಲವೇ ನನ್ನ ಬಹುತೇಕ ಕಥೆಗಳ ಪ್ರೇರಣೆ ಅನ್ನಬಹುದು. ಹಾಗಾಗಿ ನನ್ನ ಕಥೆಗಳ ವಸ್ತು ವ್ಯಾಪ್ತಿ ಅದರಾಚೆಗೆ ವಿಸ್ತರಿಸಿದ್ದು ಬಹಳ ಕಡಿಮೆಯೇ ಎಂದು ಒಪ್ಪಿಕೊಳ್ಳುವೆ. ಈಗಲೂ ಜಾತಿ-ಮತ-ಧರ‍್ಮದ ಕಾರಣದಿಂದಲೇ ನಿರ್ಧಾರಿತವಾಗುತ್ತಿರುವ ‘ಮನುಷ್ಯ ವ್ಯಕ್ತಿತ್ವ’ ನನ್ನನ್ನು ಯಾವಾಗಲೂ ಕಾಡುತ್ತದೆ. ಪ್ರಶ್ನೆ : ಕಥೆಗಳಲ್ಲಿ ಬಾಲ್ಯ, ಹರೆಯ ಇಣುಕಿದೆಯೇ? ಉತ್ತರ : ಖಂಡಿತವಾಗಿ. ಬಹುಶಃ ಯಾವುದೇ ವ್ಯಕ್ತಿತ್ವ ಬೆಳೆದು ಬರುತ್ತಲೇ ಬಾಲ್ಯ-ಯೌವನಗಳ ಅನುಭವಗಳು ಗಾಢವಾಗಿ ಪ್ರಭಾವಿಸಿರುತ್ತವೆ. ನನ್ನ ಬಹುತೇಕ ಕಥೆಗಳು ನನ್ನ ಬಾಲ್ಯದ ಅನುಭವಗಳಿಂದಲೇ ಸಾಕಷ್ಟು ವಸ್ತುಗಳನ್ನು ದೊರಕಿಸಿಕೊಂಡಿವೆ. ಹರೆಯದ ಅನುಭವಗಳ ಹಿನ್ನಲೆಯಲ್ಲಿ ಕೆಲವು ಕಥೆಗಳನ್ನು ನಿರೂಪಿಸಿದ್ದೇನೆ. ನನ್ನ ‘ಅವಾರಿ’, ‘ಇರಿತ’, ‘ಉಲ್ಕಾಪಾತ’, ‘ಅತಿಕ್ರಾಂತ’ ಮುಂತಾದ ಕಥೆಗಳು ನನ್ನ ಬಾಲ್ಯದ ಹಸಿ ಹಸಿ ನೆನಪುಗಳ ಹಿನ್ನೆಲೆಯಿಂದಲೇ ರೂಪುಗೊಂಡವು. ಪ್ರಶ್ನೆ : ಪ್ರಸ್ತುತ ರಾಜಕೀಯ ಸನ್ನಿವೇಶದ ಬಗ್ಗೆ ನಿಮ್ಮ ಪ್ರತಿಕ್ರಿಯೆಯೇನು? ಉತ್ತರ : ರಾಜಕೀಯ ವಿದ್ಯಮಾನಗಳ ಕುರಿತು ಮಾತೇ ಆಡದಿರುವುದು ಒಳಿತು ಎಂಬಂಥ ಸ್ಥಿತಿಯಲ್ಲಿ ಈಗ ನಾವಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವಿದ್ದೇವೆ ಎನ್ನುವುದು ಕೇವಲ ಬಾಯಿ ಮಾತಿಗೆ ಅಷ್ಟೇ. ಎಲ್ಲರಿಗೂ ಅಧಿಕಾರ-ಗದ್ದುಗೆ ಮತ್ತು ಸ್ವಾರ‍್ಥವೇ ಮುಖ್ಯವಾಗಿರುವಾಗ ಪ್ರಜಾಹಿತವೆಂಬುದು ಒಂದು ಚರ್ಚಿತ ವಿಷಯವಾಗಿ ಅಷ್ಟೇ ಉಳಿದುಕೊಂಡಿದೆ. ರೈತರ, ನಿರುದ್ಯೋಗಿಗಳ, ಸಂತ್ರಸ್ತರ ಕುರಿತು ಆಲೋಚಿಸಬೇಕಾದ ರಾಜಕಾರಣಿಗಳು ಕೇವಲ ಅಧಿಕಾರಕ್ಕಾಗಿ ಕಚ್ಚಾಡುವುದು, ಪರಸ್ಪರ ಕಾಲೆಳೆಯುವ, ಕೆಸರೆರಚುವ ಹುಡುಗಾಟದಲ್ಲಿ ಮಗ್ನರಾಗಿರುವುದು ರಾಜಕೀಯದ ಶೋಚನೀಯ ಸ್ಥಿತಿಗೆ ದೃಷ್ಟಾಂತಗಳಾಗಿ ತೋರುತ್ತಿವೆ. ಪ್ರಶ್ನೆ: ಧರ‍್ಮ ದೇವರು ವಿಷಯದಲ್ಲಿ ನಿಮ್ಮ ನಿಲುವೇನು? ಉತ್ತರ : ನನಗೆ ‘ವಚನ ಸಾಹಿತ್ಯ’ ತುಂಬಾ ಪ್ರಭಾವಿಸಿದ ಪ್ರಕಾರ ಅಲ್ಲಿಯೂ ಬಸವಣ್ಣನಂಥವರ ಧರ‍್ಮ ಮತ್ತು ದೇವರ ಕುರಿತಾದ ನಿಲುವು ಪರಿಕಲ್ಪನೆಗಳೇ ಹೃದಯದಿಂದ ಒಪ್ಪಿತವಾದವುಗಳು. ನನ್ನ ಬಾಲ್ಯ, ತಾರುಣ್ಯದ ಬಹು ಮುಖ್ಯ ಜೀವಿತಾವಧಿಯಲ್ಲಿ ನನಗೆ ಜಾತಿಯ ಕಾರಣದಿಂದ ದೇವಾಲಯ ಪ್ರವೇಶ ನಿಷಿದ್ಧವಾಗಿತ್ತು. ನಾನು ಕಾಲೇಜು ವಿದ್ಯಾರ್ಥಿಯಾಗಿದ್ದಾಗ ಗೋಕರ‍್ಣದ ಶಿವರಾತ್ರಿಯಲ್ಲಿ ಮಹಾಬಲೇಶ್ವರ ದೇವಸ್ಥಾನ ಪ್ರವೇಶಕ್ಕೆ ಅರ‍್ಚಕರು ತಡೆದಾಗ ನಮ್ಮ ತಂದೆಯವರು ಅರ‍್ಚಕರೊಡನೆ ಜಗಳಕ್ಕೇ ನಿಂತಿದ್ದು ನನಗೆ ನೆನಪಿದೆ. ಇಂಥ ಸನ್ನಿವೇಶಗಳಿಂದಾಗಿ ‘ದೇವಾಲಯಗಳಿಗೆ ಹೋಗದಿದ್ದರೆ ಆಗುವ ನಷ್ಟವೇನು?’ ಎಂಬ ಪ್ರಶ್ನೆಯನ್ನು ನನಗೆ ನಾನೇ ಕೇಳಿಕೊಂಡು ಅವುಗಳಿಂದ ದೂರವೇ ಉಳಿದೆ. ಹಾಗೆಂದು ನಾಸ್ತಿಕನೇನಲ್ಲ. ನಾನು ದೇವರನ್ನು ಆರಾಧಿಸುವ ಕ್ರಮ-ಪರಿಕಲ್ಪನೆಗಳು ಬೇರೆ ಅಷ್ಟೇ. ಮನುಷ್ಯನನ್ನು ಮನುಷ್ಯನಾಗಿ ನೋಡದ, ಮನುಷ್ಯ ಮನುಷ್ಯರ ನಡುವೆ ಭೇದ ಕಲ್ಪಿಸುವ ಯಾವ ದೇವರು ಧರ‍್ಮದ ಕುರಿತಾಗಿಯೂ ನನ್ನ ದಿಕ್ಕಾರವೇ. ಸೌಹಾರ್ದತೆ-ಶಾಂತಿ – ಪ್ರೀತಿಯ ನೆಲೆಯ ಯಾವ ಧರ‍್ಮವೇ/ದೇವರೇ ಆದರೂ ನಾನು ಆತ್ಮಸಾಕ್ಷಿಯಾಗಿ ಆರಾಧಿಸುವೆ. ದೇವಾಲಯ ಪ್ರವೇಶ, ಕ್ಷೇತ್ರದರ್ಶನ ಇತ್ಯಾದಿ ನನಗೆ ನಂಬಿಕೆಯಿಲ್ಲ. ಪ್ರಶ್ನೆ: ಪ್ರಸ್ತುತ ಸಾಂಸ್ಕೃತಿಕ ವಾತಾವರಣದ ಕುರಿತು ನಿಮಗೆ ಏನನ್ನಿಸುತ್ತದೆ? ಉತ್ತರ : ಸಾಂಸ್ಕೃತಿಕ ವಾತಾವರಣ ತಕ್ಕಮಟ್ಟಿಗೆ ಆಶಾದಾಯಕವಾಗಿಯೇ ಇದೆ ಅನಿಸುತ್ತದೆ. ಅಲ್ಲಿಯೂ ಆಗಾಗ ಪ್ರವೇಶ ಪಡೆಯುವ ರಾಜಕಾರಣ, ಸ್ವಜನಪಕ್ಷಪಾತ ಇತ್ಯಾದಿಗಳು ಸ್ವಲ್ಪಮಟ್ಟಿನ ಆತಂಕಕ್ಕೆ ಕಾರಣವಾಗುತ್ತದೆ ಎಂಬುದು ನಿಜವಾದರೂ ಒಟ್ಟಾರೆಯಾಗಿ ಸಾಂಸ್ಕೃತಿಕ ವಾತಾವರಣ ಸಹನೀಯವಾಗಿದೆ ಎನ್ನಬಹುದು. ಪ್ರಶ್ನೆ: ಸಾಹಿತ್ಯ ವಲಯದ ರಾಜಕಾರಣದ ಬಗ್ಗೆ ನೀವು ಹೇಗೆ ಪ್ರತಿಕ್ರಿಯಿಸುವಿರಿ? ಉತ್ತರ : ಬದುಕಿನ ಎಲ್ಲಾ ಕ್ಷೇತ್ರಗಳಲ್ಲಿಯೂ ರಾಜಕಾರಣ ತನ್ನ ಕಬಂಧ ಬಾಹುಗಳನ್ನು ಚಾಚುತ್ತಲೇ ಇರುತ್ತದೆ. ಸಾಹಿತ್ಯ ವಲಯ ಕೂಡ ಇದರಿಂದ ಹೊರತಾಗಿಲ್ಲ. ಇಲ್ಲಿಯೂ ಮತ್ತೆ ಅದೇ ಪ್ರಶ್ನೆ. ಮತ ಧರ‍್ಮಗಳಿಗೆ ಸೇರಿದ, ಸೇರದ ಎಂಬ ಗುಂಪುಗಾರಿಕೆ, ಅಕಾಡೆಮಿ, ಸಾಹಿತ್ಯ ಪರಿಷತ್ತು, ಮತ್ತಿತರ ಸಾಹಿತ್ಯ ಸಂಘಟನೆಗಳಲ್ಲಿನ ಗದ್ದುಗೆಯ ಗುದ್ದಾಟ ಇತ್ಯಾದಿ ದಿನದಿಂದ ದಿನಕ್ಕೆ ಅಧಿಕವಾಗುತ್ತಿರುವುದು ಅಸಹನೀಯವೆನಿಸುತ್ತದೆ. ಸಾಹಿತ್ಯದ ಓದು-ಬರಹಗಳು ಭಾವನಾತ್ಮಕವಾಗಿ ನಮ್ಮನ್ನು ಒಂದುಗೂಡಿಸಲು ವಿಫಲವಾದರೆ ಅದರಿಂದ ಶ್ರೀಸಾಮಾನ್ಯನಿಗಾಗುವ ಪ್ರಯೋಜನವಾದರೂ ಏನು? ಪ್ರಶ್ನೆ: ಈ ದೇಶದ ಚಲನೆಯ ಬಗ್ಗೆ ನಿಮ್ಮ ಮನಸ್ಸು ಏನು ಹೇಳುತ್ತದೆ? ಉತ್ತರ : ಅಂತರಾಷ್ಟ್ರೀಯ ಮಟ್ಟದ ಸ್ನೇಹ-ಬಾಂಧವ್ಯ, ಸ್ವಚ್ಛತೆಯ ಕುರಿತಾದ ರಾಷ್ಟ್ರಮಟ್ಟದ ಅರಿವು ಮುಂತಾದ ಸಂಗತಿಗಳು ಹೆಮ್ಮೆಯೆನಿಸುವಂತಿವೆ. ದಿನದಿಂದ ದಿನಕ್ಕೆ ಗಾಬರಿ ಹುಟ್ಟಿಸುವಂತೆ ಬೆಳೆಯುತ್ತಿರುವ ಆರ್ಥಿಕ ಹಿಂಜರಿತ, ನಿರುದ್ಯೋಗದ ತೀವ್ರ ಸಮಸ್ಯೆ, ರೈತರು ಮತ್ತು ಮದ್ಯಮ ವರ‍್ಗದ ಜನಸಾಮಾನ್ಯರ ಸಮಸ್ಯೆಗಳು ಆತಂಕ ಹುಟ್ಟಿಸುತ್ತಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷದೊಂದಿಗೆ ಪ್ರಬಲ ವಿರೋಧಿ ಪಕ್ಷವೂ ಸಕ್ರಿಯವಾಗಿರಬೇಕಾಗುತ್ತದೆ. ರಾಜ್ಯದಲ್ಲಿಯೇ ಇರಲಿ ರಾಷ್ಟ್ರಮಟ್ಟದಲ್ಲಿಯೇ ಇರಲಿ ಧ್ವನಿ ಕಳೆದುಕೊಳ್ಳುತ್ತಿರುವ ವಿರೋಧ ಪಕ್ಷಗಳ ಸ್ಥಿತಿಯನ್ನು ಗಮನಿಸಿದರೆ ಪ್ರಜಾಪ್ರಭುತ್ವ ವ್ಯವಸ್ಥೆಯ ರಕ್ಷಣೆ ಭವಿಷತ್ತಿನಲ್ಲಿ ಸಾಧ್ಯವೆ? ಸಂವಿಧಾನ ನಿಷ್ಠೆಯ ಕುರಿತು ಗಂಭೀರ ಚಿಂತನೆ ತುರ್ತು ಅಗತ್ಯವೆನಿಸುತ್ತದೆ. ಪ್ರಶ್ನೆ: ಸಾಹಿತ್ಯದ ಬಗ್ಗೆ ನಿಮ್ಮ ಕನಸುಗಳೇನು? ಸಾಹಿತ್ಯ ರಚನೆ ಆಶಾದಾಯಕವಾಗಿ ಅಭಿವೃದ್ಧಿ ಹೊಂದುತ್ತಿರುವುದು ಸಂತೋಷ ತರುತ್ತಿದೆ. ಆದರೆ ಅದೇ ಪ್ರಮಾಣದಲ್ಲಿ ಓದುಗರ ಸಂಖ್ಯೆ ಬೆಳೆಯುವಂತೆ ತೋರುತ್ತಿಲ್ಲ. ಸಾಹಿತ್ಯ ವೇದಿಕೆಗಳು, ಸಂಘ-ಸಂಸ್ಥೆಗಳು ಯುವ ಓದುಗರನ್ನು ಹೆಚ್ಚಿಸುವ ಕುರಿತು ಯೋಜನೆಗಳನ್ನು ರೂಪಿಸಬೇಕು, ಪ್ರಯತ್ನಿಸಬೇಕು. ವೈಯುಕ್ತಿಕವಾಗಿ ಇನ್ನಷ್ಟು ಬರಹಗಳಲ್ಲಿ ತೊಡಗಿಕೊಳ್ಳುವ, ಪ್ರಕಟನೆಯ ಕನಸುಗಳಿವೆ ನೋಡಬೇಕು. ಪ್ರಶ್ನೆ: ಕನ್ನಡ ಮತ್ತು ಆಂಗ್ಲ ಭಾಷೆಯ ಸಾಹಿತ್ಯದಲ್ಲಿ ನಿಮ್ಮ ಇಷ್ಟದ ಕಾಡಿದ ಕತೆಗಾರ ಸಾಹಿತಿ ಯಾರು? ಕನ್ನಡದಲ್ಲಿ ಬಹುತೇಕ ಎಲ್ಲ ಹಿರಿಯ ಸಾಹಿತಿಗಳೂ ಕವಿಗಳೂ ನನ್ನ ನೆಚ್ಚಿನವರೇ. ದೇವನೂರು, ತೇಜಸ್ವಿ, ಕುಂ. ವೀರಭದ್ರಪ್ಪ ನನ್ನ ಬಹುಮೆಚ್ಚಿನ ಲೇಖಕರು. ಮುಖ್ಯವಾಗಿ ಕಥೆ ಬರೆಯುವ ನಿಟ್ಟಿನಲ್ಲಿ ಕುಂ.ವೀ. ನನ್ನ ಇಷ್ಟದ ಮತ್ತು ನನ್ನನ್ನು ತುಂಬ ಪ್ರಭಾವಿಸಿದ ಕತೆಗಾರ. ಇಂಗ್ಲೀಷ ಸಾಹಿತ್ಯ   ಶ್ರದ್ಧೆಯ ಓದು ನನ್ನದಲ್ಲ ಹೆಮಿಂಗ್ವೇ, ಗಾರ್ಕಿ ಟಾಲ್ಸ್ಟಾಯ್ರಂಥವರ ಪ್ರಾಸಂಗಿಕ ಬೀಸು ಓದು ಮಾತ್ರವೇ ನನಗೆ ಸಾಧ್ಯವಾಗಿದೆ. ಯಾವ ಬಗೆಯ ಪ್ರಭಾವಕ್ಕೆ ದಕ್ಕುವ ಲೇಖಕರನ್ನು ಹೆಸರಿಸಲಾರೆ ಕ್ಷಮಿಸಿ. …. ಲೇಖಕರ ಬಗ್ಗೆ: ಹರಪನಹಳ್ಳಿ ಹುಟ್ಟೂರು. ಹರಪನಹಳ್ಳಿ ತಾಲೂಕಿನ ಮೈದೂರು-ಚಿಗಟೇರಿ ಬೆಳೆದ ಊರು. ಪಿಯು ಓದಿದ್ದು ಕೊಟ್ಟೂರಿನಲ್ಲಿ. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿ.ಎ., ಕವಿವಿಯಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ. ದಾವಣಗೆರೆ, ಸದಾಶಿವಗಡ ಮತ್ತು ಭಟ್ಕಳದಲ್ಲಿ ಕನ್ನಡ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿ, 1997 ರಿಂದ ಕಾರವಾರದಲ್ಲಿ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಜನವಾಹಿನಿ, ಜನಾಂತರಂಗ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಇವರು, ಈ ಟಿವಿ ಕನ್ನಡ ನ್ಯೂಸ್ ಚಾನೆಲ್ಲಿಗೆ ವರದಿಗಾರಿಕೆ ಬಳಿಕ ಈಗ ಉದಯವಾಣಿ , ಬೆಳಗಾವಿಯ ಲೋಕದರ್ಶನ ಪತ್ರಿಕೆಗೆ ವರದಿಗಾರರಾಗಿದ್ದಾರೆ. 2009ರಲ್ಲಿ ‘ಕಡಲದಂಡೆಗೆ ಬಂದ ಬಯಲು’ ಎಂಬ ಕಥಾ ಸಂಕಲನ, 2013ರಲ್ಲಿ ‘ಬಿಸಿಲ ಬಯಲ ಕಡಲು’ ಎಂಬ ಕವಿತಾ ಸಂಕಲನ ಪ್ರಕಟಣೆ.2019 ರಲ್ಲಿ ‘ವಿರಹಿದಂಡೆ’ ಕವಿತಾ ಸಂಕಲನ ಪ್ರಕಟಿಸಿದ್ದಾರೆ. ಕಾರವಾರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.‌

Read Post »

ಕಾವ್ಯಯಾನ

ಕಾವ್ಯಯಾನ

ನೆನಪುಗಳಲ್ಲಿ ಅವಳು ಲಕ್ಷ್ಮೀ ಪಾಟೀಲ್ ಅವಳ ಏಕಾಂತ ತೆರೆಯುತ್ತದೆ ನಿತ್ಯ ಕೈ ಮುಟ್ಟಿಕೂದಲು ಹಿಡಿದರೆ ಎದುರು ಮರದ ಕೆಳಗೆಸಂಧ್ಯಾ ರಾಗದ ಸಂಜೆ ಅದೇ ಮರ ಕೈ ಮಾಡಿ ಕರೆಯುತ್ತದೆ ಕೂದಲ ಸಿಕ್ಕು ಬಿಡಿಸಿಕೊಳ್ಳಲುನೀಟಾಗಿ ನೆನಪುಗಳ ತಲೆ ಬಾಚಲುಏಕಾಂತಕ್ಕೆ ಜೊತೆ ಹುಡುಕಿ ಧ್ಯಾನಿಸಲು ಸಂಧ್ಯಾರಾಗದೆ ದುರು ತಾನು ಮತ್ತೊಂದು ಕವಿತೆಯಾಗಲು !ಬರೆಯದ ಭಾವ ಗಳೆಲ್ಲ ಸಿಕ್ಕುಗಳಂತೆ ಮುತ್ತುವವು ಧ್ಯಾನಸ್ಥಳಾಗುವಳಾಗ ಕವಿತೆಯ ಸುತ್ತ !ಎಷ್ಟೊಂದು ಕವಿತೆ ಬದುಕಿದೆನಲ್ಲ ಬರೆಯಲು ಬಂದಿದ್ದರೆಪೈಪೋಟಿಯಲ್ಲಿ ಕವಿತೆ ಗೆಲ್ಲಿಸಬಹುದಿತ್ತುಈ ಹೇನು ಹರಿದಾಡಿಸಿಕೊಳ್ಳುವ ಹಿಂಸೆಗೆಮುಕ್ತಿ ಸಿಗಬಹುದಿತ್ತು ಎಂದುಕೊಳ್ಳುವಳುಈ ಕವಿತೆಗಳಿಗೆಲ್ಲ ಆಕ್ರಮಿಸುವ ಚಟಏನೆಲ್ಲಾ ಕಿತ್ತು ಖಜಾನೆ ಖಾಲಿ ಮಾಡಿ ಹೋಗುತ್ತವೆಅಕಾಲ ವ್ರದ್ಧಾಪ್ಯಕ್ಕೆ ದೂಕಿ ಯವ್ವನ ಕೊಲೆ ಮಾಡಿದ ಕೈದಿಯಾಗುತ್ತವೆ ದಂಡ ತೆತ್ತು ಪಡೆಯುವ ತೀರ್ಪಿ ನಂತೆಭಯ ಕಟ್ಟುತ್ತವೆ ಈ ಒಳ ಮುಖದ ಮಂಕತ್ವಕ್ಕೆಆ ನೆರಳು ನೀಡುವ ಮರ ನಿತ್ಯಜ್ಞಾನೋದಯಮಾಡಿಸುವ ಬೋದಿ ವ್ರಕ್ಷದಂತೆ ಆಕಾಶಕ್ಕೆ ದಿಟ್ಟಿಸಿದರೆವ್ಯಥೆ ಗೊಂದುಷರಾ ಬರೆದ ನೀಲಮೇಘ ಶಾಮ ನಂತೆತಾನೀಗ ಕಾವ್ಯಕ್ಕೆ ಜೀವ ತುಂಬಲು ನಡೆಯುವಳುದಿಟ್ಟ ಬದುಕಿನ ಪಾಠ ಹೀಗೆ ನಿತ್ಯ ಪಡೆಯುವಳು ಕೃಷ್ನೆಅವಳು ಉರಿಯಕುಂಡದಿಂದ ಎದ್ದವಳುಉರಿಯನುಂಗಿ ಉಳಿಯುವುದು ತಿಳಿದವಳುಉರಿಯಬದುಕಿನ ಕಲೆ ಯಾದವಳುನೆನಪುಗಳಲ್ಲಿ ನೆಲೆಯಾದವಳು ನಮ್ಮಲ್ಲೂ ಹೀಗೆ ಕೃಷ್ನೆ *************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನಾನು ಕೆಟ್ಟವಳು ಶೀಲಾ ಭಂಡಾರ್ಕರ್ ನಿನ್ನ ಪ್ರೀತಿಯ ಪರಿಮಾಣದಲ್ಲಿಒಂದಿಷ್ಟು ಆಚೆ ಈಚೆಯಾದಾಗನಾನು ಕೆಟ್ಟವಳು. ನನ್ನನ್ನು ಬದಿಗೆ ತಳ್ಳಿಇನ್ಯಾರನ್ನೋ ತಲೆ ಮೇಲೆಕೂರಿಸಿಕೊಂಡಾಗ,ನಾನು ಕೆಟ್ಟವಳು. ಅತಿಯಾಗಿ ಸಿಟ್ಟು ಬಂದಾಗನಿನ್ನ ಚುಚ್ಚಿ ನೋಯಿಸಿಖುಷಿ ಪಡುವಾಗನಿಜವಾಗಲೂನಾನು ಕೆಟ್ಟವಳು. ಇಷ್ಟೇ.. ನಾನು ಕೆಟ್ಟವಳಾಗುವುದುಇವಿಷ್ಟೇ ಸಂದರ್ಭಗಳಲ್ಲಿ. ನಾನು ಕೆಟ್ಟವಳಾದಮರುಕ್ಷಣವೇಮನವರಿಕೆಯಾಗಿಮತ್ತೆ ನಿನ್ನೆಡೆಗೆ ಬಂದಾಗ, ನೀನು ಎಂದಿನಂತೆಮುದ್ದಿಸುವಿಯಲ್ಲ..!ಆಗ ಮಾತ್ರ..ನೀನೇ ಕೆಟ್ಟವನು. ************

ಕಾವ್ಯಯಾನ Read Post »

You cannot copy content of this page

Scroll to Top