ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಗಝಲ್ ಪ್ರತಿಮಾ ಕೋಮಾರ ಕಹಿಯೂರಲ್ಲೊಂದು ಸಿಹಿ ಗಿಡವ ನೆಡುವ ಸಹಕರಿಸು ಬಂದು ನೆಟ್ಟ ಗಿಡಕೆ ಜೀವ ಜಲ ಕೊಟ್ಟು ಪೊರೆಯುವ ಸಹಕರಿ‌‌ಸು ಬಂದು ಬಾಗಿ ಬಸವಳಿದು ಉರುಳಿದ ಜೀವಕೆ ಸಾಂತ್ವನವೇ ಮದ್ದು ಮಾನವತೆಯ ನೆಲೆಯಲ್ಲಿ ಮಮತೆಯನು ಹನಿಸುವ ಸಹಕರಿಸು ಬಂದು ಕೋಟೆಗಳ  ಕಟ್ಟಿ ಹಕ್ಕಿಯೆಂದಾದರೂ ತನ್ನ ಬಂಧಿಸಿಕೊಂಡೀತೇ? ಮನಗಳ ನಡುವೆ ಹಬ್ಬಿರುವ ಬೇಲಿಯನು ಕಡಿಯುವ ಸಹಕರಿಸು ಬಂದು ಸ್ವಾಥ೯ದ ಮಾರುಕಟ್ಟೆಯಲ್ಲಿ ಬಿಕರಿಯಾಗುವವು ಬರೀ ಸ್ವಾಥ೯ಗಳೇ ನಿಸ್ವಾಥ೯ತೆಯ ದೀಪ ಹಚ್ಚಿ ಬದುಕ ಬೆಳಗುವ ಸಹಕರಿಸು ಬಂದು ಗಂಧಕ್ಕೆ ಮುಚ್ಚಿ,ಬಿಚ್ಚಿ,ಬೊಬ್ಬೆ ಹೊಡೆವ ಅವಶ್ಯಕತೆಯೇ ಇಲ್ಲ ಒಳ್ಳೆಯತನದಿ ಒಮ್ಮೆ ಕುಸಿದ “ಪ್ರತಿ” ಹೃದಯ ತಟ್ಟಿ ಬರುವ ಸಹಕರಿಸು ಬಂದು ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಪ್ರಿಯ ಸಖ H. ಶೌಕತ್ ಆಲಿ  ಬೆಳದಿಂಗಳಲ್ಲಿ ತಂಪು ತಂಗಾಳಿಯಲ್ಲಿ ನಮ್ಮ ಮಿಲನ ಆಲಿಂಗನ ಅರಳಿದ ನೈದಿಲೆಯ ಚಂದಿರನ ಚುಂಬನ ಪ್ರಶಾಂತವಾದ ಹೃದಯ ಮನಸೆಲ್ಲಾ ಅವನಲ್ಲೇ ಲೀನಾ ಆಧ್ಯಾತ್ಮವೂ ಅಮರ ಪ್ರೇಮವೂ ಬುದ್ಧ ನನ್ನ ಪ್ರಿಯ ಸಖ ಬೆಳಕಾಗಬೇಕು ಈ ಭೂಮಿಯು ಈ ಸುಂದರ ಪ್ರಕೃತಿ ನೆನಪಿರಲಿ ಶ್ವೇತ ಮೋಡಗಳು ಆಗಸದಲ್ಲಿ ಹೃನ್ಮನಗಳು ಏಕಾಂತವಾಗಿ ಭಾವನೆಗಳು ಹೂವಂತೆ ಅರಳಿ ಸುಖದ ಸೆಲೆಯಾಗಿ ಅವ ನಿಂತ ಬುದ್ಧ ನನ್ನ ಪ್ರಿಯ ಸಖ ನೋಟದಲ್ಲಿ ಸಾವಿರ ಅರ್ಥ ಜನ್ಮಜನ್ಮಾಂತರ ಪುನೀತ ಕಣ್ಣ ರೆಪ್ಪೆಗಳು ಮಿಟುಕಾಡಲಿಲ್ಲ ಜಗದ ಉದ್ದಾರಕ ನಾಯಕ ಶುಭವನ್ನೆ ಲೇಸೆಂದು ಬಯಸುವ ಬೆಳದಿಂಗಳ ಭಾಸ್ಕರ ಚಂದಿರ ನಾ ಬೆರೆತು ಹೋದೆ ಬೆಳಕಲಿ ನಕ್ಷತ್ರಗಳು ಆಗಸದಲ್ಲಿ ಆಗೋ ಬಂದ ನನ್ನ ಸನಿಹಕ್ಕೆ ಮಿತ್ರ ಬುದ್ಧನನ್ನ ಪ್ರಿಯಸಖಿ **********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಪೂರ್ಣವಾಗದ ಸಾಲುಗಳು ಶೀಲಾ ಭಂಡಾರ್ಕರ್ ಮನಸ್ಸು ಒಮ್ಮೊಮ್ಮೆತೊಟ್ಟಿಕ್ಕುತ್ತಾ ಶಬ್ದಗಳಾಗಿ, ಹಾಳೆಯ ಮೇಲೆ ಒಂದೊಂದಾಗಿ ಬಿದ್ದು ಹರಡಿಕೊಳ್ಳುತ್ತಾ…. ಶುರುವಿಟ್ಟುಕೊಳ್ಳುತ್ತದೆ ಆಡಲು ಶಬ್ದಗಳ ಆಟ. ಹೊಂದಿಕೊಳ್ಳಲು ಹೆಣಗುವ ಭಾವನೆಗಳ ಮಾಟ. ಕವಿತೆಯಾಗಲು ಹೊರಟ ನಿಶ್ಶಬ್ದ ಶಬ್ದಗಳ ಅರ್ಧಂಬರ್ಧ ಸಾಲುಗಳು. ನೋಡಲು ಯಾವುದೋ ನಿರ್ಭಾವುಕ ಚಹರೆಯಂತಹ ಉಲ್ಲೇಖಗಳು. ಹಿಂದೊಮ್ಮೆ ಮುಂದೊಮ್ಮೆ ನಿಲ್ಲಲು ಸೆಣಸಾಟ. ಅರ್ಥವಿಲ್ಲದವುಗಳ ಮೂಲೆಗೆ ತಳ್ಳಾಟ ಮನುಷ್ಯರಲ್ಲಿ ಮಾತ್ರವಲ್ಲ ಶಬ್ದಗಳಿಗೂ ಸಂಬಂಧಗಳಲ್ಲಿ ಹೊಂದಾಣಿಕೆ ಬೇಕು ಎಂದರೆ ಒಪ್ಪುವಿರಾ? *********

ಕಾವ್ಯಯಾನ Read Post »

ಇತರೆ

ಪ್ರಸ್ತುತ

ಹೋಮ್ ಕೇರ್ ಹಗರಣ. ಮಾಲತಿಶ್ರೀನಿವಾಸನ್. ಇತ್ತೀಚೆಗೆ ನಗರಗಳಲ್ಲಿ ವೃದ್ಧರ,ರೋಗಿಗಳ,ಮತ್ತು ಮಕ್ಕಳ ಆರೈಕೆಗೆ ಮನೆಯಲ್ಲಿದ್ದು ಮನೆಯವರೊಡನೆ ಸಹಕರಿಸಿಸಹಾಯಮಾಡಲು ಜನರನ್ನುಒದಗಿಸುವ ಸಂಘಗಳುಹೆಚ್ಚಳವಾಗಿವೆ ,ಹಿಂದೆ, ಒಂದೋ ಎರಡೋ nightingale,Red cross,ನಂತಹ ಸಂಸ್ಥೆಗಳು ಈ ಜವಾಬ್ದಾರಿ ಹೊರುತ್ತಿದ್ದವು,ಈಗ ಪ್ರತಿ ಸರ್ಕಾರಿ/ಹಾಗೂಖಾಸಗಿ ಅಸ್ಪತ್ರೆಯಲ್ಲೂಇಂತಹ ಸಂಸ್ಥೆಗಳ ಸಂಚಾಲಕರು ಈ ಕೆಲಸ ಒಪ್ಪಿಕೊಂಡು, ನುರಿತ ಜನರನ್ನು ಒದಗಿಸುತ್ತಿರುವುದು ಶ್ಲಾಘನೀಯವಾದ ಸಮಾಜಸೇವ.     ಅವರ ಶುಲ್ಕ ,ಮುಂಗಡ ಹಣ ದುಬಾರಿ ಅನಿಸಿದರೂತುರ್ತುಪರಿಸ್ಥಿತಿಯಲ್ಲಿ ಅವಶ್ಯಕತೆ ಇದ್ದಾಗ ಸಿಗುವ ನೆರವುಅಪ್ಯಾಯಮಾನ ಹಾಗೂ ಉಪಯುಕ್ತ.      ಇಂತಹ ಸಂಸ್ಥೆಗಳು ಕಳುಹಿಸಿದ ಅಪರಿಚಿತ ಸಹಾಯಕರನ್ನುತಿಂಗಳುಗಳು ಒಮೊಮ್ಮೆವರುಷಗಳುಜೊತೆಯಲ್ಲಿಟ್ಟುಕೊಂಡು,ವೃದ್ಧರ ,ರೋಗಿಗಳ ಆರೈಕೆಯ ಜೊತೆಗೆ ಇವರ ಅವಶ್ಯಕತೆಗಳನ್ನು ಪೂರೈಸುವುದು ಸುಲುಬದ ಕೆಲಸವಲ್ಲ. ಅನುಭವಕ್ಕೆ ಬಂದಾಗಮಾತ್ರಅದರ ಒಳಿತು ಕೆಡುಕು ಮುಜುಗರಗಳ ಅರಿವಾಗುವುದು.    ಹತ್ತಿರದವರು,ತಾಯಿ ತಂದೆ ,ಅತ್ತೆ ಮಾವ,ಖಾಯಿಲೆ ಮಲಗಿದಾಗ,ಅವರ ಆರೈಕೆ ಮತ್ತು ದೈನಂದಿನ, ಒಳಗಿನ ಮತ್ತು ಹೊರಗಿನ ಕೆಲಸಗಳ ಒತ್ತಡ, ಸಹಾಯಕ್ಕೆ ಜನ ಬೇಕೆನಿಸುವುದು ಸಹಜ.     ಎಪ್ಪತ್ತುದಾಟಿರುವ ನಮ್ಮಿಬ್ಬರಿಗೂ ಇಂತಹ ಸಂಧರ್ಭಎದುರಾಗಿದ್ದು ಸ್ವಂತ ತಂಗಿಯನ್ನು (65ವಯಸ್ಸು,) ಬಿದ್ದು ತೊಡೆಮೂಲೆ ಮುರಿದುಕೊಂಡು ಶಸ್ತ್ರ ಚಿಕಿತ್ಸೆಯನಂತರಅವಳನ್ನು ನನ್ನ ಮನೆಗೆ ಆರೈಕೆಗಾಗಿ ಕರೆದುಕೊಂಡು ಬಂದಾಗ.  ಸಹಾಯಕ್ಕೆ ಬಂದವರ ರೀತಿ ರಿವಾಜು ನೆನೆಸಿಕೊಂಡರೆ ಈಗ ನಗುಬರುತ್ತೆ.    ಅಸ್ಪತ್ರೆಯವರೆ ಸಂಪರ್ಕಿಸಲು ಹೇಳಿದ “ಹೋಮ್ ಕೇರ್”ಸಂಸ್ಥೆಯೊಡನೆ ಮಾತಾಡಿದಾಗ,ಸಹಾಯಕ್ಕೆ ಬಂದದ್ದು ಮಧ್ಯವಯಸ್ಸಿನ ಹೆಂಗಸು. ನಾನುಅನುಭವಸ್ಥೆ ರೋಗಿಗಳ ಎಲ್ಲ ರೀತಿಯ ಆರೈಕೆ ನನಗೆ ಗೊತ್ತು ಅಂತ ಹೇಳಿಕೊಂಡು ಬಂದ ಹೆಂಗಸು.    ತಂಗಿಗೆ ಸ್ನಾನ,ಓಡಾಟಕ್ಕೆ ಸಹಾಯ ಮಾಡುವುದರ ಜೊತೆಗೆ ಚರವಾಣಿಯಲ್ಲಿ ಸೀರಿಯಲ್ ನೋಡುವ ಹವ್ಯಾಸ,ಮೊದಲು ಸರಿ ಎನಿಸಿದರೂ,ವೈಫೈ ಪಾಸ್ವರ್ಡ್ಕೊಡಿ ಅಂತ ದಿನಕ್ಕೆ ಹತ್ತು ಸರಿ ಕೇಳುತ್ತಿದದ್ದು ಮುಜುಗರವೆನ್ನಿ ಸುತ್ತಿತ್ತು.ಇಳೆವಯಸ್ಸಿನಲ್ಲಿ ಮಕ್ಕಳು ದೂರದ ಪರದೇಶದಲ್ಲಿ, ಇಬ್ಬರೇಮನೆಲಿ ಬಿಟ್ಟಿಬಿಡೆಯಾಗಿ ಇದ್ದು ರೂಢಿ ಯಾದನಮಗೆ 24 ಘಂಟೆ ಅಪರಿಚಿತರೊಡನೆ ಇರುವಂತಹ ಸ್ಸನ್ನಿವೇಶ,ಜೊತೆಯಲ್ಲಿ ಊಟ ಉಪಚಾರಬೇಕು ಬೇಡಿಕೆಗಳ ಜವಾಬ್ದಾರಿ.   ನಮ್ಮ ಸಹಾಯಕ್ಕೆ ತಮ್ಮ ಮನೆ ಮನೆಯವರನ್ನು ಬಿಟ್ಟುಬಂದಿರುವುದರ ಅರಿವು ಸಹಜವಾಗೆ ನಮ್ಮಲ್ಲಿ ಅವರ ಬಗ್ಗೆ ದಯೆ ಮೂಡಿಸಿದರು,ನಮ್ಮಮನೆಯ ಊಟ ತಿಂಡಿ ವಿಚಾರಗಳಿಗೆ ಹೊಂದಿಕೊಳ್ಳದೆ ತಮ್ಮದೇ ಬೇಕು ,ಬೇಡದ ಅಭ್ಯಾಸಗಳನ್ನು ಹೇರಿದಾಗ ಸಹಜವಾಗಿ ಮುಜುಗರ ಅನಿಸಿತ್ತು.   “ಅಮ್ಮನಾವು ಕಾಫಿಕುಡಿಯೋಲ್ಲ,ಟೀ ನೆ ಅಭ್ಯಾಸ ,ಜೊತೆಗೆ Marie ಬಿಸ್ಕುಟ್ ಬೇಕು,ಬರಿ ಟೀಕುಡಿದ್ರೆ gaastrikku”.ಅಂತ ಹೇಳಿದಾಗ,“ಮಾರೀ ಬಿಸ್ಕುತ್ತು ನಾಯಿ ಇದ್ದಾಗ ತರ್ತಾ ಇದ್ದಿವಿ,ಈಗ ಇದ್ಯೆನೆ?” ಪತಿದೇವರ ನಗಾಡ್ತಾ ಒಗ್ಗರಣೆ.ನೀವ್ ಸುಮ್ನಿರಿ ಅಂತ ಕೂಗಿ,ಕೆಲಸದ ಹುಡುಗನ್ನ ಟೀಪಟ್ನಾ ಬಿಸ್ಕುತ್ ತರೋದಕ್ಕೆ ಓಡಿಸಿದೆ.  ಮುಂದಿನ ಬೇಡಿಕೆ ಕೇಳಿ ಸುಸ್ತಾದೆ ನಾನು,”ಆಂಟಿನಂಗೆ ತಂಗಳಪೆಟ್ಟಿಗೆ ಇಂದ ತೆಗದ ತಣ್ಣಗಿನ ಪದಾರ್ಥ್ಮೈಗಾಗೋಲ್ಲ,ಮೊಸರು ಹೊರಗೆಇಟ್ಟು ಹಾಕಿ ಅಂದುತಂಗಿ ಕೋಣೆ ಸೇರಿದ್ಲು.ಅಯ್ಯೋ ದೇವರೇ ಬೇಸಿಗೆ ಸೆಕೆಲಿ ಮೊಸರು ಫ್ರಿಡ್ಜ್ ನಿಂದ ಹೊರಗೆ,  ದುಬಾರಿ ಬೆಲೆಗಳ ಕಾಲದಲ್ಲಿ ಉಳಿದದ್ದನ್ನುಮಾರನೆದಿನ ಬಿಸಿಮಾಡಿನಾವೆ ತಿನ್ನೋವಾಗ,4-5ಜನ ತಿನ್ನೋಮನೆಯಲ್ಲಿ ಸರಿಯಾಗೇ ಅಳತೆ ಮಾಡಿ ಮಾಡೋದ್ ಹೇಗೆ?,ಮಂಡೆ ಬಿಸಿಯಾಯ್ತು.ಈ ಮನೇಲಿಕದ್ದು ಮುಚ್ಚಿ ಮಾಡೋ ಛಾನ್ಸೆ ಇಲ್ಲ,open kitchenಎಲ್ಲ ಒಪೆನ್ನೇ,ತಂಗಿಗಾಗಿ ಹಾಲು,ಜ್ಯುಸು ಅಂತ ಅವಳುಒಳಗು ಹೊರಗೂ ಓಡಾಡ್ತಾ ಒಂದ್ ಕಣ್ ನನ್ಮೇಲೆ.   ಇದೊಂದು ರೀತಿ  “camel in the camp”ತರ ಆಯ್ತುತಂಗಿ ನಿದ್ದೆ ಮಾಡ್ತಾಯಿದ್ರೆ ಜೋರಾಗಿ ವೂಟ್ನಲ್ಲಿ ಸಿರಿಯಲ್ನೋಡೋದು.,ಗಳಿಗೆ ಒಂದುಸಲ ಇಂಟರ್ನೆಟ್ ಇಲ್ವ ಅಕ್ಕ ಅಂತ ಕೇಳೋದು, ತಾಳ್ಮೆ ಪರೀಕ್ಷೆ ನಡೆದಿತ್ತು.ಇನ್ನು ರೋಗಿಗೆ ಕೊಡೋ ಔಷಧಿಗಳನ್ನು ಪರಕಿಸಿ ಇದು ಸರಿ ಅದು ಸರಿಇಲ್ಲ ಅಂತ ,ವೈದ್ಯರಿಗಿಂತ ತನಗೆ ಗೊತ್ತುಅನ್ನೋಜೋರು.  ಒಂದು ಸಂಜೆ ನೋವು ಜಾಸ್ತಿ ಅಂತ ತಂಗಿ ಹೇಳಿದಾಗ ಅವಳ ವೈದ್ಯರು ಹೇಳಿದ್ದ ಮಾತ್ರೆ ಕೊಡಲು ಹೋದಾಗ“ಅಯ್ಯೋ ಇದೇನ್ ಕೊಡ್ತಿದ್ದೀರ ನೋವಿಗೆ ಎನೂ ಕೆಲಸ ಮಾಡಲ್ಲ,ಬೇರೆ ಹೇಳ್ತೀನಿ ಕೊಡಿ,ಇದರಲ್ಲಿ 10 ವರುಷದ ಅನುಭವ ನಂದು”ಅಂತ ವರಸೆ ತೆಗೆದ್ಲು ,ಮಾನಸಿಕವಾಗಿ ನೋವಿನಿಂದ ಕುಗ್ಗಿದ ತಂಗಿ ಅವಳ ಹೇಳಿದ ಮಾತ್ರೆನೆ ಬೇಕು ಅಂತ ರಾತ್ರಿ ಶುರು ,ನಗರದ ಹೊರಾವಲಯದಲ್ಲಿಮನೆ, ಔಷದಿ ಅಂಗಡಿ ಹತ್ತಿರಿಲ್ಲ ,ಪತಿರಾಯರ ಸಿಟ್ಟುನೆತ್ತಿಗೇರಿತ್ತು.  ಇಂತಹ ಎಡಬಿಡಂಗಿ ಸಹಾಯಕರನ್ನು ಕಳುಹಿಸಿದ ಸಂಸ್ಥೆಗೆ ದೂರಿತ್ತರೆ, ಮುಂಗಡ ಹಣದ ಜೊತೆಗೆ 15ದಿನದ ಒಪ್ಪಂದದ ಪತ್ರ ನೆನಪಿಸಿ,ಬೇರೆಯವರನ್ನು ಕಳುಹಿಸಲು ಒಪ್ಪಿದಾಗ ಸರಿ ಎನಿಸಿತು.   15ದಿನದ ನಂತರ ಇವಳು ಹೊರಟುನಿಂತಾಗ ಪಾಪ ಎನಿಸದಿರಲಿಲ್ಲ, ಕೆಲಸ ಸರಿಯಿದ್ದರು ದಾಷ್ಟೀಕತೆ,ತಲೆಹರಟೆ ತಡೆಯುವುದು ಕಷ್ಟವಾಗಿತ್ತು,ಕಾಂಚಾನಮ್ ಕರ್ಮ ವಿಮೋಚನಮ್ ,ಅಂತ ಮನ ಹಗುರಮಾಡಿಕೊಳ್ಳಲುಕೈಗಿಷ್ಟು ಹಣ ಕೊಟ್ಟು ಕಳುಹಿಸಿ,,ಮಾರನೇ ದಿನ ಬರುವವಳ ಬಗ್ಗೆ ಯೋಚನೆ ಆರಂಭ.    ಮಾರನೇ ದಿನ ಬಂದ ಹುಡುಗಿ ಧಾರವಾಡದ ಪುಟ್ಟಗೌರಿ.”ಇವಲಿಂದ್ದ ಏನು ತೊಂದರೆ ಆಗೋಲ್ಲ ಅಮ್ಮ ಅಂತ ವ್ಯವಸ್ಥಾಪಕ ಭರವಸೆ ಕೊಟ್ಟು ಹೊರಟ.ಎರಡನೇ ಅಂಕ ಪ್ರಾರಂಭವಾಯಿತು,ರಾತ್ರಿ ಮಲಗೊಕ್ಕೆಅಂತ ಕೊಟ್ಟ ಹಾಸಿಗೆ ಮೇಲ್ ಕೂತು”ಅಮ್ಮವರೆ ಇದರಮೇಲ್ ಹಾಸ್ಕೊಳ್ಳೋಕ್ಕೆ ಒಂದ್ ದುಪಟ್ಟಿ ಕೋಡ್ರಲ್ಲ,  “ಬೀರುಯಿಂದ ಹಳೆ ಬೆಡ್ಶೀಟ್ ಹೊರ ತೆಗೆದು ಕೊಟ್ಟಿದ್ದಾಯ್ತು.  ಏಪ್ರಿಲ್  ಬಿಸಿಲು ಶೆಕೆಕಾಲ,ಕಿಟಕಿತೆಗದ್ರೆ ಸೊಳ್ಳೆ,ಫ್ಯಾನ್ ಹಾಕೋದು ಅನಿವಾರ್ಯ, ಹೀಗಿರಲು,ಎಲ್ಲರೂಮಲಗಿದ ನಂತರ ಮಧ್ಯರಾತ್ರಿ ತಂಗಿ ಕೂಗು,”ಫ್ಯಾನ್ ಹಾಕು ಶೆಕೆ, ಎಸ್ಟುಸಲಾ ಹೇಳೊದು,” ಎದ್ದು ನೋಡಿದರೆ ಪುಟ್ಟಗೌರಿ ಪಂಕ ಬಂದ್ ಮಾಡಿ ಕೂತಿದ್ಲು,ಯಾಕ್ ಪಂಕ ಬಂದ್ ಮಾಡ್ದೆ ಗೌರಮ್ಮ,ಅಂದ್ರೆ,”ಪಂಕ ಚಾಲು ಮಾಡಿದ್ರೆ ನಂಗ್ ತಲೀ ನೋಯ್ತದ್ರಿ ನಿದ್ದಿ ಬರಹಂಗಿಲ್ಲ,ಪಂಕದ್ ಗಾಳಿ ಆಗೋಹಂಗಿಲ್ಲ, ನಿದ್ದಿ ಕೆಟ್ಟರೆ ನ ಮುಂಜಾನ್ ಕೆಲಸ ಮಾಡೋಹಂಗೇ ಇಲ್ ನೋಡ್ರಿ”ಅಂದ್ಲು ಪುಟ್ಟಗೌರಿಖಡಕ್ ಭಾಷೆಲಿ. ಅರೆ ಬೇಸಿಗೆ ಕಾಲ ಶೆಕೆ ಪಂಕ ಇಲ್ಲದಿದ್ರೆ ಹೇಗೆ ಗೌರಿ ಅಂದ್ರೆ”ಹಂಗಾರ್ ನಾ ಹೊರಗ್ ಮಲಗ್ ಲೇನು,ನೀವೇ ಇಲ್ ಮಲಾಗ್ರಿ ಅಕಿ ಕೂಡ”ಅಂದ್ಲು ಗೌರಮ್ಮ ,”ಅರೆ ನಿನ್ನ ಕರೆಸಿದ್ ಯಾಕೆ”ಅಂತ ಸ್ವಲ್ಪ ಜೋರ್ ಮಾಡಿದಾಗ,ಸರಿ ಪಂಕ ಹಾಕ್ರಿ ನಾ ಮುಸುಖ್ ಹಾಕ್ಕೊಂಡ ಮಲಗ್ತೇನೆ ಅಂತ ಮುಸುಕೆಳದಳು.ಮತ್ತೆ ಮಧ್ಯ ರಾತ್ರಿ ತಂಗಿ ಕೂಗು,ನೀಡಗನ್ನಲಿ ಎದ್ದು ಬಂದು ನೋಡಿದ್ರೆ,ಫ್ಯಾನ್ ಬಂದ್,ಕೂಗಿದ್ದು ಕೇಳಿಸಲಿಲ್ಲಾರಿ,ಚಳಿ ಆಯ್ತು,ತಿಳೀದೆ ಪಂಕ ಬಂಧ್ಮಾಡಿದೆ ನೋಡ್ರಿ ಅಂತ ಮತ್ತೆ ಸ್ವಿಚ್ ತಿರುಗಿಸಿದಳು.ಮಲಗೊಕ್ಕೆ ಕೊನೆಗ್ ಬಂದಾಗ”ಖಾತ್ರಿ ಹೋಯ್ತು ಚಾಕು ಬಂತು ಡುಂ ಡುಂ ಅಂತ ಪತಿರಾಯರು ಕಿಚಾಯಿಸದಾಗ,ಮೌನವಾಗಿ ಮುಸುಕೆಳೆದು ಬೆಳಗಾಗೋದನ್ನೇ ಕಾಯೋ ಹಾಗಾಯ್ತು.   ಅಂತೂ ಒಂದು ತಿಂಗಳು ಇಂತಹ ಇಟ್ಟುಕೊಂಡು ತಂಗಿವಾಳ್ಕರ್ ಇಟ್ಟುಕೊಂಡು ನಡೆಯೋಷ್ಟು ಆದಾಗ ಪುಟ್ಟುಗೌರಿಗೂ ವಿದಾಯ ಹೇಳೋ ಸಮಯಬಂತು.      ಹೊರತು ನಿಂತ ಪುಟ್ಟಗೌರಿ ಆಡಿದ ಮಾತು ಕೇಳಿಮನಸ್ಸು ಬೆಚ್ಚಗಾಯ್ತು.”ಅಕ್ಕಾವ್ರೆ ನಿಮ್ಮ ಮನಿಸಾರು ತಿಂಡಿ ಹೊಟ್ಟಿಗ್ ಚಂದ್ ಆತು,ಕೈತುಂಬಾ ತಾಟಲ್ಲಿ ,ತಟ್ಟಿ ತುಂಬಾ ಬಡಿಸ್ತಿರಿ ,ಬೇರೆ ಕಡಿ ಮಂದಿ ಹಾಂಗ್ ಇರೋಹಂಗಿಲ್ರಿ, ಲೆಕ್ಕಮಾಡಿ ಉಣಲಿಕ್ಕೆ ಕೊಡತ್ತರ್ರಿ,ನೀವ್ ಉಡೋದು ಒಂದೆರಡು ಕಾಟನ್ ಸೀರೆ ಕೋಡ್ರಲ್ಲಒಂದ್ ನಾಉಟ್ಟು ಇನ್ನೊಂದ್ ನನ್ ಅವ್ವನ್ಗೆ ಕೊಡ್ತೀನಿ,ನೋಡುತ್ಲು ಕೇಳ್ತಾಳ ಆಕಿ ಎನ್ ತಂದಿ ಅಂತ” ಅಂದ್ಲು   ಒಗದು ಇಟ್ಟಿದ್ದ ಎರಡು ಕಾಟನ್ ಸೀರೆ ಜೊತೆಗೆಸ್ವಲ್ಪ ಹಣ ಕೈಲಿಟ್ಟಾಗ,ಖುಷಿಯಾಗ್ ಕಾಲಹಿಡ್ಕೊಂಡ್ “ಆಶೀರ್ವಾದ ಮಾಡ್ರಿ ಅಕ್ಕಾವ್ರೆ ಒಳ್ಳಿ ದಾಗ್ಲಿ ಅಂತ”ನಮಸ್ಕಾರ ಮಾಡಿದಾಗ,ಈ ಸಂಸ್ಕಾರ ,ಮುಗ್ದತೆಈ ಪಟ್ಟಣದಲ್ಲಿ ಬೆಳೆದ ಹೆಣ್ಣು ಮಕ್ಕಳಲ್ಲಿ ಯಾಕೆಮರೆಯಾಗ್ತಿದೆ ಅನಿಸಿ ಮನಸ್ಸಿಗೆ ಕಸಿವಿಸಿಯಾಯಿತು.    ತಮ್ಮ ಸಂಸಾರ ,ಮನೆಯವರನ್ನು ಬಿಟ್ಟು ಸಂಪಾದನೆಗಾಗಿ ಬೇರೊಬ್ಬರ ಮನೆಯಲ್ಲಿದ್ದುವೃದ್ಧರ ಮಕ್ಕಳ ರೋಗಿಗಳ ಆರೈಕೆ ಮಾಡುವಈ ಸಹಾಯಕರ ಸೇವೆ ಕರ್ತವ್ಯ ನಿಷ್ಠೆಯ ಎರಡು ಮುಖಗಳು ಕಾಣುತ್ತೇವೆ ಸಮಾಜದಲ್ಲಿ.   ಮಗ ಸೊಸೆ ಕೆಲಸಕ್ಕೆ ಹೊರಡುತ್ತಲೇ ಮೇಲೆಳಲಾರದವಯೋವೃದ್ಧೆಯ ಸಹಾಯಕರು,ಹಿರಿಯರ ಮೇಲೆ ಒಮ್ಮೊಮ್ಮೆ ಮಕ್ಕಳ ಮೇಲೆ ನಡೆಸುವ ದೌರ್ಜನ್ಯ ಅಸಹನೀಯ.ಊಟ ತಿಂಡಿ ಎಲ್ಲ ವ್ಯವಸ್ಥೆ ಮಾಡಿದ್ದರುಹೊತ್ತುಹೊತ್ತಿಗೆ ಕೊಡುವತಾಳ್ಮೆತೋರಿಸದೆ ,ಚರವಾಣಿ ಸಂಭಾಷಣೆ,ದೂರದರ್ಶನದ ಸೀರಿಯಲ್ ಆಕರ್ಷಣೆ,ಇವರನ್ನುಸೆಳೆಯುತ್ತವೆ.ಇಷ್ಟ ಬಂದಾಗ ಊಟ ತಿಂಡಿಕೊಡುವ ದೋರಣೆ,ಕೆಟ್ಟ ಭಾಷೆಯ ಪ್ರಯೋಗ.ಎಲ್ಲೆಡೆ ಹೀಗೆ ಅಂತ ಹೇಳಲಾಗುವುದಿಲ್ಲ,ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಪ್ರೀತಿ ಕಾಳಜಿಯಿಂದನೋಡಿಕೊಳ್ಳುವವರು ಇದ್ದಾರೆ,ಅವರ ಸೇವಾಭಾವ ದುಡ್ಡಿನಲ್ಲಿ ಅಳೆಯಲಾಗುವುದಿಲ್ಲ.   ಹಿಂದಿನ ಅವಿಭಕ್ತ ಕುಟುಂಬಗಳಲ್ಲಿ ಈ ರೀತಿಯ ಸಮಸ್ಯೆಗಳಿಗೆ ಅಷ್ಟು ಅವಕಾಶವಿರುತ್ತಿರಲಿಲ್ಲ,ಮನೆತುಂಬಾ ಜನ, ಬಾಣಂತಿಯರ ,ರೋಗಿಗಳ ಆರೈಕೆ,ವೃದ್ಧರ ಸೇವೆ,ಮಕ್ಕಳಲಾಲನೆ-ಪಾಲನೆ,ಸಾಮೂಹಿಕ ಕ್ರಿಯೆಗಳಾಗಿಭಾರವೆನಿಸುತ್ತಿರಲಿಲ್ಲ.ಇಂದುಚಿಕ್ಕ ಒಮ್ಮೊಮ್ಮೆ ಚೊಕ್ಕವಲ್ಲದ ಸಂಸಾರಗಳ ವ್ಯವಸ್ಥೆ,ಸ್ವಾರ್ಥ,ಸಿಟ್ಟು,ಅಸಹನೆ,ಅಹಮಿಕೆಯಂತಹನಕಾರಾತ್ಮಕ ಭಾವಗಳ ನರ್ತನ,ಪರಿಣಾಮ ಒತ್ತಡಹಾಗೂ ಖಿನ್ನತೆ ಸಮಸ್ಯೆಗಳು.   ನಾ ಕಂಡ ರೀತಿಯ ರ್ಹೊಂಕೇರ್ ವ್ಯವಸ್ಥೆಯ ಬಗ್ಗೆಸಣ್ಣ ನೋಟ.ಈ ವ್ಯವಸ್ಥೆ ಹಲವಾರು ಕುಟುಂಬಗಳಿಗೆಜೀವನಾಧಾರ.  ಇವರಸೇವೆ ಅವಶ್ಯಕತೆ ಬಿದ್ದಾಗ ಅನಿವಾರ್ಯ ಸಂಸಾರಗಳಿಗೆ/ಸಮಾಜಕ್ಕೆ. ಈ ವ್ಯವಸ್ಥೆ ಯ ರೂವಾರಿಗಳು ತಮ್ಮ ಕಾರ್ಯ ಮತ್ತಷ್ಟು ದಕ್ಷತೆಯಿಂದ ನಡೆಸಿದರೆ ಜನಸೇವೆಗೆ ಒಳಿತು. ಕ

ಪ್ರಸ್ತುತ Read Post »

ಕಾವ್ಯಯಾನ

ಕಾವ್ಯಯಾನ

ನಿಯಮ ಡಾ.ಅಜಿತ್ ಹರೀಶಿ . ಅಪಘಾತಗಳೆಲ್ಲ ಆಕಸ್ಮಿಕಗಳಲ್ಲ ಕಾರಣವಿರಬಹುದಲ್ಲ ಅಲಕ್ಷ್ಯ ಆತುರ ಅತ್ಯುತ್ಸಾಹ ಕಲ್ಪಿಸುವ ಎದುರಿನ ಅಚಾತುರ್ಯ ಬೇಕೆಂದಾಗ ಬಂಜೆತನ ಬೇಡವಾದಾಗ ಫಲಿಸುವ ಗರ್ಭ ಸುರತಕ್ಕೆ ಸುರಕ್ಷಿತ ಸಂಗಾತಿ ಮಾತ್ರ! ಯುಗ ಬದಲಾಗಿದೆ ಸ್ವರ್ಗ ನರಕಗಳೆಲ್ಲವೂ ಸೃಷ್ಟಿಯಾಗಿದೆ ಇಲ್ಲೇ ತೆರೆಯಲಾಗಿದೆ ಬದುಕಿನ ಕಂದಾಯ ಕಟ್ಟುವ ಕೌಂಟರ್ ನಮ್ಮಲ್ಲೇ ದೇವನ ಕಣ್ಣುಗಳು ಮಾರು-ಮಾರಿಗೆ ಎಲ್ಲೆಲ್ಲೂ ಟವರ್ ಲೊಕೇಷನ್ ಅಪರಾಧಿಯಾಗದ ಸೂತ್ರ ಜೀವಿಸುವ ಸಾಫ್ ಸೀದಾ *********

ಕಾವ್ಯಯಾನ Read Post »

ಕಾವ್ಯಯಾನ

ಬುದ್ಧ ಪೂರ್ಣಿಮೆಯ ವಿಶೇಷ-ಕವಿತೆ

ಬೆಳಕಿನ ಸಂತ ಶಿವಶಂಕರ ಸೀಗೆಹಟ್ಟಿ. ಊರೂರು ಸುತ್ತಿದ ಬಿಕ್ಕುಪಾತ್ರೆ ನನ್ನ ಮುಂದೆಯೇ ಬಂದು ನಿಂತಿದೆ ಪಾತ್ರೆಗೆ ಬೀಳುವ ಎಲ್ಲವೂ ನನ್ನೊಳಗೆ ಅಕ್ಷಯವಾಗುತ್ತಿವೆ ಅಚ್ಚರಿಯೆನಿಸಿತು ನಾನು ಕತ್ತಲನು ಸುರಿದಾಗ ಬೆಳದಿಂಗಳು ನನ್ನ ಕಣ್ಣೆದುರಿಗಿತ್ತು ಊರೂರು ತಿರುಗಿದ ಬೆಳಕು ಮನವೆಂಬ ಗುಡಿಸಲಿಗೂ ಬಂದು ಬೆಳಕು ಕೊಟ್ಟಿದೆ ಬೆಳಕು ಪಡೆಯುವ ತವಕದ ಬಯಕೆಯಲ್ಲಿ ಗಾಳಿ ತಾಗಬಹುದೆಂದು ಬದುಕ ಅಡ್ಡಗಟ್ಟಿದ್ದೇನೆ ಹೆಗಲ ಜೋಳಿಗೆಯಲ್ಲಿ ಬಯಲೆಂಬ ಸಿರಿಯು ಬದುಕುಗಟ್ಟಿದೆ ಬಾಚಿ ತಬ್ಬುವ ತವಕದಲ್ಲಿ ಬೆನ್ನ ಹಿಂದೆಯೇ ಸಾವರಿಸಿ ನಡೆಯುತಿದ್ದೇನೆ ಆಸೆ ಅತಿಯಾಗಬಾರದೆಂಬ ಬುದ್ದಗುರುವಿನ ಮಾತುಗಳನು ನೆನೆದು ಅರಿವಿನ ಮರದ ಬಳಿ ದಾರಿ ಕಾಯುತ್ತಿದ್ದೇನೆ. ಮನದ ಕೊಳೆ ತೊಳೆದ ಅರಿವಿನ ಸಂತನಿಗೆ ಕಾರುಣ್ಯದ ಬತ್ತಿಯನು ಜೀವರಸವೆಂಬ ನೂಲಿನಲದ್ದಿ ಬೆಳಕೆಂಬ ಬೆಳಕಿಗೆ ಪೂಜಿತನಾಗಿದ್ದೇನೆ ಆತನೊ ಜಂಗಮಕೆ ನಡೆನಡೆದು ಜಗದ ಗುರುವೆನಿಸಿದನು ನಾನು ಬಯಲಲ್ಲಿ ಮೈತ್ರಿಯನಂಚಿ ಆನಂದಿತನಾದೆನು. ******

ಬುದ್ಧ ಪೂರ್ಣಿಮೆಯ ವಿಶೇಷ-ಕವಿತೆ Read Post »

ಕಾವ್ಯಯಾನ

ಬುದ್ಧ ಪೂರ್ಣಿಮೆಯ ವಿಶೇಷ -ಕವಿತೆ

ವೈಶಾಖ ಹುಣ್ಣಿಮೆ ರಾತ್ರಿ ಶಾಲಿನಿ ಆರ್. ಮನುಕುಲದ ಭಾಗ್ಯ ನಮ್ಮ ಸರ್ವಾಥ ಸಿದ್ಧ/ ಲೋಕದ ಜನರ ದುಃಖ ನಿವಾರಿಸಲರಿತು ಎದ್ದ// ವೈಶಾಖ ಹುಣ್ಣಿಮೆಯ ರಾತ್ರಿ ಹಳೆನೆನಪುಗಳ ಕಳಚಿತು/ ದಿವ್ಯಚಕ್ಷುವಿನಿಂದಾದ ಯೋಗ ಜ್ಞಾನಜ್ಯೋತಿ ಬೆಳಗಿತು// ದೇದೀಪ್ಯಮಾನ ಬೆಳಗದು ಮನುಕುಲದ ತಮವ ಕಳಚಿತು/ ಧ್ಯಾನದೊಳಿದ್ದರು ಎಚ್ಚರವಾಗಿರುವ ಮನದ ನೇತ್ರ ಅರಳಿತು// ಬಿಂದುವೊಂದು ಸಿಂಧುವಾದ ಆನಂದದಾ ಮೊಗ/ ಅನಿರ್ವಚನೀಯ ಕಲ್ಮಷರಹಿತ ಪರಮಾನಂದದಾ ಯೋಗ// ಮಾನವ ಕುಲ ಒಂದು ಆಸೆಯೇ ದುಃಖಕ್ಕೆ ಕಾರಣ ಎಂದ/ ಸಮ್ಯಕ್ ಬೋಧಿ’ ಸಿದ ಅಷ್ಟಾಂಗ ಮಾರ್ಗ ಅರುಹಿದ// ಬಹುಜನ ಹಿತಾಯ ಬಹುಜನ ಸುಖಾಯ ಬೋಧಿಸಿದ / ಮರಣ ಜನನದ ಅನಿವಾರ್ಯವೆಂದು ನಿರ್ವಣದ ದಾರಿ ತೋರಿಸಿದ// ಜಗದ ಅಮರಜ್ಯೋತಿಯಾಗಿ ಅಮೃತಧಾರೆ ಹರಿಸಿದ/ ಧನ್ಯನಾದ ಗುರು ನಮ್ಮ ಸರ್ವಾಥಸಿದ್ಧ ಬುದ್ಧನಾದ// ******

ಬುದ್ಧ ಪೂರ್ಣಿಮೆಯ ವಿಶೇಷ -ಕವಿತೆ Read Post »

ಕಾವ್ಯಯಾನ

ಬುದ್ಧ ಪೂರ್ಣಿಮೆ ವಿಶೇಷ-ಕವಿತೆ

ಬೆಳಕಿಗೊಂದು ಮುನ್ನುಡಿ ಅರಸುತ. ಪೂರ್ಣಿಮಾ ಸುರೇಶ್ ವಿಶ್ವವೆಲ್ಲವನು ಕಪ್ಪು ಕವಿದಾವರಿಸಿದ ವೇಳೆ ಸೃಷ್ಟಿಯಖಿಲದ ಜೀವಜಾತಗಳಿಗೆಲ್ಲ. ನಿದ್ರೆಯ ಮಾಯೆ ಮುಸುಕಿರುವ ವೇಳೆ ಸೊಬಗಿನೈಸಿರಿಯೆ ಸಾಕಾರಗೊಂಡಂತೆ ಪಕ್ಕದಲಿ ಪವಡಿಸಿದ ಸುಕೋಮಲೆಯ. ಘನವಾದ ಕಟ್ಟಕ್ಕರೆಯ ಚೆಂಬೆಳಕ ಲೆಕ್ಕಿಸದೆ ಹೊರಟೇಬಿಟ್ಟ ಪುಣ್ಯಾತ್ಮ. ಹೊಸ ಬೆಳಕಿನ ಮೂರ್ತತೆಯ ಹುಡುಕಾಟದಲ್ಲಿ ಬದುಕಿನರ್ಥವ ಬಗೆವ ಬೆದಕು ನೋಟದಲ್ಲಿ ನನ್ನೊಳಗೂ ಆಗಾಗ್ಗೆ ತುಂಬಿಕೊಳ್ಳುವ. ಕಪ್ಪಿಗೆ ಕಪ್ಪ ಸಲ್ಲಿಸುತ್ತಲೇ ಬಂದಿರುವೆ. ಆದರೀಗ ಕಪ್ಪಿನೆದೆಯನ್ನಿರಿದು ಆಚೆ ಹೆಜ್ಜೆ ಹಾಕಿರುವೆ. ಅವ್ಯಕ್ತದೆಡೆಗೆ ಅವನಂತೆ ಒಬ್ಬಂಟಿ- ಕೆಮ್ಮಣ್ಣ ಮಾದಕ ಕಂಪನ್ನು ಮೂಸಿ ಮುಟ್ಟಿರುವೆನವನ ಸಂಪ್ರೀತಿ ದಡವ ಅವನ ಕಣ್ಣುಗಳ ಒಳಪುಟಗಳಲ್ಲಿ ಅಚ್ಚಾದ ನಲ್ಗವಿತೆಯನ್ನು ಕದ್ದು ನನ್ನೆದೆಯ ತಂತಿಯಿಂದದನು ಶ್ರುತಿಗೊಳಿಸಿ ದನಿ ನೀಡಿ ನಯವಾಗಿ ಹರ್ಷಿಸಿರುವೆ ತುಂತುರು ತುಂತುರಾಗಿ ಜಿನುಗುವ ನಾದದ ಬೆಳಕನ್ನು ಬೊಗಸೆಯಲ್ಲಿ ಹಿಡಿದಿಡುವ ಸಾಹಸದ ಆಟ ನನಗೆ; ಹಂಬಲದ ಅರಗಿಣಿಯ ರಮಣೀಯ ರೆಕ್ಕೆಗಳ ವಿವಿಧ ವರ್ಣಗಳ ಚೆಂದನೆಯ ಗರಿಗಳಿಂದ ಅಲಂಕರಿಸಿ, ಸೊಬಗ ಸವಿಯುತ ನನ್ನ ಮೈಯನು ಮರೆತು ಮಹದಾನಂದಕ್ಕೆ ಚೊಕ್ಕ ಮುನ್ನುಡಿ ಬರೆವಾಸೆ ನನಗೆ. ಕೊನೆಗೆ, ನಟ್ಟಿರುಳಿನಲ್ಲಿ ಏಕಾಏಕಿ ಅರಮನೆ ತೊರೆದವನ. ಶಾಂತ ವದನದ ಕಾಂತಿಯುಕ್ತ ತೇಜಸ್ಸಿನಲಿ ಮಿಂದೆದ್ದು, ಶುಚಿಗೊಳುವ. ಅದಮ್ಯ ಸಾರ್ಥಕ್ಯದಾಸೆ ನನಗೆ. *********

ಬುದ್ಧ ಪೂರ್ಣಿಮೆ ವಿಶೇಷ-ಕವಿತೆ Read Post »

ಕಾವ್ಯಯಾನ

ಬುದ್ಧ ಪೂರ್ಣಿಮೆಯ ವಿಶೇಷ-ಕವಿತೆ

ಬುದ್ದಂ ಶರಣಂ! ಚೈತ್ರಾ ಶಿವಯೋಗಿಮಠ ನಿನ್ನಲ್ಲಿ ನನ್ನಲ್ಲಿ ಎಲ್ಲೆಲ್ಲಿಯೂ ದೇವರ ಕಂಡೆ ಅಂತಹದರಲ್ಲಿ ನನ್ನನೇ ನೀನು ದೇವರ ಮಾಡಿಕೊಂಡೆ ದೀಪವ ಮುಡಿಸಿ, ಧೂಪವ ಹಾಕಿದೆ ಮೂರ್ತಿ ಮಾಡಿ ಒಳಗಿನ ದೀಪವ ಬೆಳಗಲಾರೆಯ ಮನದ ಸೊಡರಿಗೆ ಕಿಡಿ ನೀಡಿ? ಅನ್ನವ ಬೇಯಿಸಿ, ಹಿಸುಕಿ ಪರೀಕ್ಷಿಸಿ ಬೆಂದನ್ನವ ಸಮರ್ಪಿಸಿದೆ ಎಡೆಯೆಂದು ಮನದ ಗಡಿಗೆಯಲಿ ಭಾವದನ್ನವ ಬೇಯಿಸಲಾರೆಯ ನೀನಿಂದು? ನಾನು ದೇವರಲ್ಲ, ನಿನ್ನೊಳಗಿನ ಪ್ರಾಂಜಲ ದೈವತ್ವ! ದೇವರಾಗಿಸದೆ, ಮರೆಯದೆ ಮೆರೆಸಿದರೆ ಸಾಕು ಮನುಷ್ಯತ್ವ! ಇನ್ನಾದರೂ ನಿನ್ನೊಳಗಿರುವ ನನ್ನ ಕೂಗನ್ನ ಕೇಳು ಮಲಗಿದ್ದು ಸಾಕು ಬಿಡು.ನಡಿ ಬೆಳದಿಂಗಳ ದಾರಿ ಹಿಡಿ ,ಏಳು. ********

ಬುದ್ಧ ಪೂರ್ಣಿಮೆಯ ವಿಶೇಷ-ಕವಿತೆ Read Post »

ಇತರೆ

ಹರಟೆ

ಇಲಿ ಪುರಾಣ ಶೀಲಾ ಭಂಡಾರ್ಕರ್ “ಇಲಿಗಳ ಸಂಸಾರದಲ್ಲೂ ಅಜ್ಜಿಯರು ಇರ್ತಾರಾ? ರಾತ್ರಿ ಮಲಗುವಾಗ ಒಳ್ಳೊಳ್ಳೆ ನೀತಿ ಕತೆಗಳನ್ನು ಹೇಳಿ ಮಲಗಿಸ್ತಾರಾ? ಹೇಗೆ ತಪ್ಪಿಸಿಕೊಳ್ಳುವುದು ಅನ್ನುವ ಟಿಪ್ಸ್ ಹೇಳಿ ಕೊಡ್ತಾರಾ?” ಗೊಣಗ್ತಾ ಇದ್ದೆ ನಾನು. ಮಕ್ಕಳಿಬ್ಬರೂ ಮುಖ ಮುಖ ನೋಡಿಕೊಂಡು “ಅಮ್ಮ ಶಶಿಕಪೂರ್” ಅಂತ ಮುಸಿ ಮುಸಿ ನಗ್ತಾ ಇದ್ರು. ನಮ್ಮನೇಲಿದ್ದ ಗೊಣಗುವ ಶೇಷಿಯ ಕತೆ ಹೇಳಿದ್ನಲ್ಲ. ಶೇಷಿಗೆ ದಿನ್ನು, ಶಶಿಕಪೂರ್ ಅಂತ ಹೆಸರಿಟ್ಟಿದ್ದನ್ನೂ ಹೇಳಿದ್ದೇನೆ. ನಿಮಗೆ ಮರೆತಿರಬಹುದು. ನನಗೆ ಕೋಪ ಬಂತು. “ನಿಮಗೇನು ಗೊತ್ತು? ನಗ್ತಿದಿರಲ್ಲ ನೀವು!” ಅಂತ ಬೈದೆ. ದೊಡ್ಡವಳು ಕೂಡಲೇ ಕೂತಲ್ಲಿಂದ ಎದ್ದು ಅಡುಗೆ ಮನೆಗೆ ಬಂದು ನನ್ನ ಭುಜ ಹಿಡಿದು ಪ್ರೀತಿಯಿಂದ “ಏನಾಯ್ತಮ್ಮ?” ಅಂದಾಗ.. ಚಿಕ್ಕವಳೂ ಬಂದು ನಿಂತಳು. “ಏನಿಲ್ವೆ… ಇಷ್ಟು ವರ್ಷದಲ್ಲಿ ಮೊದಲ ಸಲ ನಮ್ಮನೇಲಿ ಇಲಿ ಸೇರಿಕೊಂಡಿದೆ. ಒಂದೆರಡು ಸಲ ನೋಡಿದೆ” ಅನ್ನುವುದರೊಳಗೆ, … ಚಿಕ್ಕವಳು “ಅಬಾ….” ಅಂದವಳೇ ಒಂದೇ ಉಸಿರಿಗೆ ಓಡಿ ಡೈನಿಂಗ್ ಟೇಬಲ್ ಚೇರ್ ಹತ್ತಿ ನಿಂತು ಬಿಟ್ಟಳು. ದೊಡ್ಡವಳು ಸ್ವಲ್ಪ ಧೈರ್ಯದಿಂದ “ಎಲ್ಲಿ!?” ಅಂತ ಕೇಳಿದಳು. “ಇಲ್ಲೇ ಈಗ ನೋಡಿದೆ. ಆದರೆ ಪಕ್ಕದ ಮನೆಯವರ ಹತ್ತಿರ ಇಲಿ ಹಿಡಿಯುವ ಬೋನು ತಂದು ಇಟ್ಟು ಮೂರು ದಿನ ಆಯ್ತು. ಬೋನ್ ಹತ್ರ ಮಾತ್ರ ಹೋಗ್ತಿಲ್ಲ. ಜಾಗ ಬದಲಿಸಿ ಬದಲಿಸಿ ಇಟ್ಟು ನೋಡಿದೆ.” ಅಂದೆ. ಅಡುಗೆ ಮನೆಯ ಒಳಗಿದ್ದವಳು ಮೆಲ್ಲ ಮೆಲ್ಲ ಹೊರಗೆ ಹೋಗುತ್ತಾ.. “ಇರು ಗೂಗಲ್ ಮಾಡ್ತೇನೆ. ಮೌಸ್ ಹೇಗೆ ಹಿಡಿಯುವುದು ಅಂತ” ಅನ್ನುತ್ತಾ ಮೊಬೈಲ್ ತಗೊಂಡು ಕೂತಳು. “ಅದಕ್ಕೆಲ್ಲ ಗೂಗಲ್ ಯಾಕೆ? ಬೋನಿನೊಳಗೆ ಬೀಳುತ್ತೆ. ಆದರೆ ನನಗೆ ಡೌಟ್ ಅದರಜ್ಜಿ ಎಲ್ಲೋ ಹೇಳಿಕೊಟ್ಟಿರಬೇಕು.” ಅನ್ನುತ್ತಾ ದೋಸೆ ತಟ್ಟೆಗೆ ಹಾಕಿ ಚಟ್ನಿ ಬೆಣ್ಣೆ ಡೈನಿಂಗ್ ಟೇಬಲ್ ಮೇಲಿದೆ ತಗೊಂಡು ತಿನ್ನು ಅಂತ ಚಿಕ್ಕವಳನ್ನು ಕರೆದರೆ. ಅಲ್ಲಿಂದಲೇ “ನೀನೇ ಹಾಕಿ ಕೊಡು ನಾನಿಲ್ಲಿ ನಿಂತೇ ತಿನ್ನುತ್ತೇನೆ.” ದೊಡ್ಡವಳು ಮೊಬೈಲಿಂದ ತಲೆ ಎತ್ತದೆ “ಇಷ್ಟು ಡುಮ್ಮಿ ಇದಿಯಾ. ನಿನ್ನ ಒಂದು ಬೆರಳಿನಷ್ಟಿರೋ ಇಲಿಗೆ ಹೆದರ್ತಿಯಲ್ಲ” ಅಂತ ಛೇಡಿಸಿದಾಗ, ಫಕ್ಕನೆ ಕುರ್ಚಿಯಿಂದ ನೆಗೆದು, ನಂಗೆ ಡುಮ್ಮಿ ಅಂತಿಯಾ ಅಂತ ಅವಳಿಗೆ ಹೊಡೆಯಲು ಹೋದಳು. “ಅಮ್ಮಾ…. ಇಲಿ” ಅಂತ ದೊಡ್ಡವಳು ಕಿರುಚಿದಾಗ ಡುಮ್ಮಿ ಒಂದೇ ನೆಗೆತಕ್ಕೆ ಕುರ್ಚಿಯ ಮೇಲೆ ಕಣ್ಣು ಮುಚ್ಚಿ ನಿಂತಾಯ್ತು. ಪಾಪ ಅಂತ ಅಲ್ಲಿಯೇ ತಟ್ಟೆ ಕೈಗೆ ಕೊಟ್ರೆ ತಿನ್ನುತ್ತಾ ” ಬೋನಿನೊಳಗೆ ಹೇಗೆ ಹೋಗುತ್ತೆ?”  ಅವಳು ಹಾಗೆಯೇ. “ಅಬ್ಬಾ!! ಶುರುವಾಯ್ತು ಇನ್ನು ಪ್ರಶ್ನೆಗಳ ಸರಮಾಲೆ. ಅಮ್ಮ ನೀನೇ ಹೇಳ್ತಾ ಹೋಗು. ಇವಳಿಗೆ ಪ್ರಶ್ನೆ ಕೇಳಲಿಕ್ಕೆ ಬಿಡಬೇಡ.”  ದೊಡ್ಡವಳು ಅಂದಾಗ. ಕುರ್ಚಿಯ ಮೇಲಿನವಳು ” ಇರು ನಿಂಗೆ. ಇಲಿ ಹೋಗ್ಲಿ. ಆಮೇಲೆ ಮಾಡ್ತಿನಿ”. “ದೇವರೇ… ಇಲಿ ಇಲ್ಲೇ ಇರಲಿ.” ದೊಡ್ಡವಳಿಗೆ ಆಟ. ಚಿಕ್ಕವಳಿಗೆ ಸಂಕಟ. ಹೊಟ್ಟೆ ತುಂಬಿತೇನೋ ಚಿಕ್ಕವಳಿಗೆ ಯೋಚನೆ ಶುರುವಾಯ್ತು. “ನಾನು.. ಶಾಲೆಗೆ, ಟ್ಯೂಷನ್ ಗೆ ಹೇಗೆ ಹೋಗ್ಲಿ” “ಮೊದಲು ಇಳಿದು ಕೈ ತೊಳೆಯಲು ಹೋಗು” ಅಂದೆ. “ಅಯ್ಮಮ್ಮಾ…… ಆಗಲ್ಲ. ನಂಗೆ ಭಯ” ನಾನು ಹೇಳಿದೆ, “ಪಕ್ಕದ ಮನೆಯವರ  ಇಲಿ ಬೋನು ತಂದು ಇಟ್ಟಿದ್ದೇನೆ. ಅವರಂದ್ರು, ಕಾಯಿ ಚೂರಾಗಲಿ, ವಡೆ ಬೋಂಡ ಅಂತಾದ್ದು ಏನಾದರೂ ಆ ತಂತಿಗೆ ಸಿಕ್ಕಿಸಿಡಿ ಅಂತ. ಈ ನಿಮ್ಮಪ್ಪ, ಒಂದು ಈರುಳ್ಳಿ ಹೆಚ್ಚಿ ನಾಲ್ಕು ಬೋಂಡ ಮಾಡು ಮೂರು ನನಗಿರಲಿ, ಒಂದು ಇಲಿಗೆ ಇಡು. ಪಾಪ ನಮ್ಮನೆಗೆ ಬಂದಿದೆ ಅಷ್ಟಾದರೂ ನೋಡಿಕೊಳ್ಳಬೇಕಲ್ವಾ. ಅಂತೆ. ಈರುಳ್ಳಿ ಬೋಂಡ ಇಟ್ಟು ಮೂರು ದಿನ ಆಯ್ತು, ಇನ್ನೂ ಬಿದ್ದಿಲ್ಲ” ಅಂದೆ. ” ಏನೂ… ಮೂರು ದಿನ ಆಯ್ತಾ? ಯೆಬ್ಬೇ. ದಿನಾ ಫ್ರೆಶ್ ಆಗಿ ಇಡಬೇಕಮ್ಮ. ಪಾಪ.” ಅಂದ ದೊಡ್ಡವಳ ತಲೆಯ ಮೇಲೊಂದು ಮೊಟಕಿ ಹೇಳಿದೆ, ” ಅಥವಾ ನಿಮ್ ತರ ಈಗಿನ ಜಮಾನಾದ ಇಲಿಗೂ ಪಿಜ಼ಾ, ಬರ್ಗರ್ ಬೇಕೇನೋ ಯಾರಿಗ್ಗೊತ್ತು.” ಇದೊಳ್ಳೆ ಮಾಡರ್ನ್ ಇಲಿ ಆಯ್ತಲ್ಲ. ಏನು ಮಾಡುವುದೀಗ? ಪಕ್ಕದ ಮನೆಯವರ ಬಳಿ ಹೇಳಿದಾಗ ಅವರಂದರು ಈವಾಗ ಏನೋ ಮ್ಯಾಟ್ ತರ ಬಂದಿದೆಯಂತೆ ಅದನ್ನು ಬಿಡಿಸಿಟ್ಟರೆ ಅದರಲ್ಲಿರೋ ಜೆಲ್ ಗೆ ಇಲಿ ಅಂಟಿ ಕೊಳ್ಳುತ್ತಂತೆ ಅಂತ. ಅದನ್ನು ತಂದಿಟ್ಟು ನೋಡೋಣ ಅಂದೆ. “ನಿನ್ನ ಮಾಡರ್ನ್ ಇಲಿ ಮರಿ ಅದನ್ನೂ ಗೂಗಲ್ ಮಾಡಿ ನೋಡಿರಬಹುದು, ಅದನ್ನು ದಾಟೋದಕ್ಕೆ ಉಪಾಯವನ್ನು ಕೂಡ ಕಂಡು ಹಿಡಿದಿರಬಹುದು” ಅಂದಳು ನಮ್ಮ ಗೂಗಲ್ ರಾಜಕುಮಾರಿ. ನಮ್ಮಜ್ಜಿ, ನಮ್ಮಮ್ಮ ಎಲ್ಲಾ ಹೇಳ್ತಿದ್ರು, ಗಣಪತಿಗೇನಾದರೂ ಹರಕೆ ಹೇಳಿದ್ದು ಮರೆತು ಹೋಗಿದ್ದರೆ ನೆನಪಿಸಲು ಇಲಿಯನ್ನು ಕಳಿಸ್ತಾನೆ ಅಂತ. ಮರೆತಿರಬಹುದಾದ ಎಲ್ಲ ಹರಕೆಗಳನ್ನು ತೀರಿಸುತಿದ್ದೇನೆ. ನೋಡೋಣ ಯಾವಾಗ ಹೋಗುತ್ತೋ. ಅದರ ಬಾಯಿಗೆ ಯಾವುದೂ ಸಿಗದ ಹಾಗೆ ಇಡುವ ಕೆಲಸವೇ ಇಡೀ ದಿನ. ಅಥವಾ ಹೊಸ ಬಜ್ಜಿ ಬೋಂಡದ ಆಸೆಗೆ ಕಾಯ್ತಾ ಇದೆಯೋ. ಇವಳು ಈ ಜನ್ಮದಲ್ಲಿ ಫ್ರೆಶ್ ಬೋಂಡ ಇಡಲ್ಲ ಅಂತ ಗೊತ್ತಾಗ್ಲಿ. ಮತ್ತೆ ಯಾವತ್ತೂ ನಮ್ಮನೆ ದಾರಿಲಿ ಬರಕೂಡದು. ಹಾಗಂದುಕೊಂಡಿದ್ದೇನೆ ***********************

ಹರಟೆ Read Post »

You cannot copy content of this page

Scroll to Top