ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಹಾರು ಗರಿ ಬಿಚ್ಚಿ ಡಾ.ಗೋವಿಂದ ಹೆಗಡೆ ಏನಾದರೂ ಆಗಬೇಕು ಬಾಂಬಿನಂತಹ ಏನೋ ಒಂದು ಸ್ಫೋಟಿಸಿ ಹೊಗೆಯಲ್ಲಿ ಅಥವಾ ಅಗ್ನಿಗೋಲದಲ್ಲಿ ಮರೆಯಾಗಿ ಬೇಡ, ಚಾಚಿದ ಕಾಲಿಗೆ ಅಲ್ಲೆಲ್ಲೋ ಮರಳಲ್ಲಿ ಓಡುವ ಇರುವೆ ಕಚ್ಚಿ ‘ಹ್ಹಾ’ ಎಂದು ಏನಾದರೂ ನಡೆಯಲಿ ಇಲ್ಲಿ ಈ ನಿಷ್ಕ್ರಿಯತೆಯನ್ನು ಹೇಗೆ ಸಹಿಸುವುದು +++ ನಿಷ್ಕ್ರಿಯತೆ ನಿರಾಕರಣೆಯೇ ಅನುಭವವೇ ಆಭಾಸವೇ ಅಲ್ಲೆಲ್ಲೋ ಕೋಗಿಲೆ ಕೂಗಿದೆ ಹಕ್ಕಿ ಜೋಡಿ ಸಂಜೆ ಆಗಸವ ಸೀಳಿ ಹಾರಿವೆ ಎಲೆಯೊಂದು ಟಕ್ಕೆಂದು ತೊಟ್ಟು ಕಳಚಿದೆ ತುಸು ಆಲಿಸಿದರೆ ಕೊಂಬೆಯೊಳಗೆ ಹರಿವ ಜೀವರಸದ ಸದ್ದೂ ಕೇಳಬಹುದು ಆದರೂ ಐಸಿಯು ನಲ್ಲಿರುವ ಬಾಲೆಯ ಸ್ತಬ್ಧ ಕಣ್ಣುಗಳ ಶೂನ್ಯ ನೋಟ ಮಾತ್ರ… +++ ಸೂರ್ಯ ಎಂದಿನಂತೆ ಬೆಳಗುತ್ತ ಈ ಗಿಡ ಮರ ಎಲ್ಲ ಹಸಿರುಟ್ಟು ಬೀಗುತ್ತ ಹೊಂಗೆ ಮತ್ತಾವುದೋ ಗಿಡ ಹೂತೇರು ಕಟ್ಟಿ ನಾನು ನಾಲ್ಕು ಗೋಡೆಗಳ ಒಳಗೆ ಹರಿವ ನೀರಿಗೆ ಬಿಚ್ಚಿ ಹಾರಲಾರೆ ಗುಡ್ಡ ಹತ್ತಲಾರೆ ಮರ ಏರಲಾರೆ ಬಯಲಲ್ಲಿ ಕುಣಿಯಲಾರೆ ಆಜೀವ ಶಿಕ್ಷೆಗೆ ಪಕ್ಕಾದ ಕೈದಿಯಂತೆ ಗೋಡೆ ಬಾಗಿಲುಗಳ ನಿರುಕಿಸುತ್ತ.. +++ ಬೋಳು ರಸ್ತೆಗಳು ಹೆಜ್ಜೆ ಸದ್ದಿಗೆ ತವಕಿಸಿರಬಹುದು ಪುಚ್ಚ ಕುಣಿಸಿ ಹಾರುವ ಹಕ್ಕಿ ಓಡುತ್ತ ಏರುವ ನಡುವೆ ಗಕ್ಕನೆ ನಿಂತ ಅಳಿಲಿಗೆ ಇರಬಹುದು ಅಗತ್ಯ ನನ್ನ ನೋಟವೊಂದರ ಸಾಂಗತ್ಯ ಮತ್ತೆ ಚಕ್ರ ತಿರುಗಿ ರಸ್ತೆ ಕಲಕಲ ಎನ್ನುವಾಗ ಮರೆಯದೆ ಐಸಿಯು ನ ಆ ಬಾಲೆಯ ಕೈಯಲ್ಲಿ ಕೈಯಿಡಬೇಕು ಹೂ ರೆಪ್ಪೆಗಳ ಮೇಲೆ ಹಗೂ‌♪ರ ಬೆರಳಾಡಿಸಿ ಪಿಸುಗುಡಬೇಕು “ಏಳು ಮಗೂ, ಸರಿದಿದೆ ಮೋಡ ಕಾದಿದೆ ಬಾನು ಹೋಗು ಹಾರು ಗರಿ ಬಿಚ್ಚಿ…” **********

ಕಾವ್ಯಯಾನ Read Post »

ಇತರೆ

ಪ್ರಬಂಧ

ಕರೊನ-ನೆಗಡಿ ಜ್ಯೋತಿ ಡಿ.ಬೊಮ್ಮಾ ಈಗ ಎಲ್ಲರೂ ಅಸ್ಪೃಶ್ಯರೆ ,ಒಬ್ಬರಿಂದ ಒಬ್ಬರು ದೂರ ಇರುವ ಅಸಹಾಯಕತೆ ತಂದೊಡ್ಡಿದ ಆ ಒಂದು ಚಿಕ್ಕ ವೈರಾಣುವಿಗೆ ಇಡೀ ಮನುಕುಲವೇ ಅಂಜಿ ನಡುಗುತ್ತಿದೆ. ಆಪ್ತವಾಗಬೇಕಿದ್ದ ಬಾಂಧವ್ಯಗಳು ಸಂಬಂಧಗಳು ಕರಗುತ್ತಿವೆ.ದೈಹಿಕ ಅಂತರ ಮನದಂತರವನ್ನು ದೂರಗೊಳಿಸುತ್ತಿದೆ ಒಬ್ಬರನ್ನೊಬ್ಬರು ಅನುಮಾನದಿಂದ ನೋಡಿಕೊಳ್ಳುತ್ತ ,ತಮ್ಮವರೊಡನೆಯೂ ಆಗಂತುಕರಂತೆ ಬದುಕುವಂತೆ ಮಾಡಿದ ಈ ಸಂದರ್ಭ ಯಾತಾನಾಮಯವಾಗಿದೆ. ಮನೆಯಲ್ಲಿ ಎಲ್ಲರೊಡನೆ ಬೆರೆತು ಊಟ ತಿಂಡಿ ಮಾಡುತಿದ್ದರೂ ಒಳಗೆಲ್ಲ ಎಕಾಂಗಿ ಭಾವ ,ಎನೋ ತಳಮಳ ಹೇಳಿಕೊಳ್ಳಲಾಗದ ಅಸಹಾಯಕತೆ ,ಹಿಂದೆಂದೂ ಕಾಡಿರದ ಅನಿಶ್ಚಿತತೆ ಮನ ಕೊರೆಯುವಂತೆ ಮಾಡುತ್ತಿದೆ. ಇಡೀ ದೇಶವೆ ಒಂದು ಕಾರಾಗೃಹವಾಗಿ ಎಲ್ಲರ ಸ್ವಾತಂತ್ರ್ಯ ಹರಣವಾಗಿ ಈಗ ಅಕ್ಷರಶಃ ಎಲ್ಲರೂ ಕೈದಿಗಳೆ. ಆಪತ್ತು ತಮ್ಮ ಮೇಲೆ ಯಾವಾಗ ಎರಗುವದೋ ಎಂಬ ಭಿತಿಯಲ್ಲಿ ದಿನಗಳನ್ನು ದೂಡುತ್ತ ಮತ್ತೆ ಮೊದಲಿನಂತೆ ಬದುಕು ಬಂಡಿ ಸಾಗಿಸುವ ದಿನಗಳ ಕನಸು ಕಾಣುತ್ತ ,ಕ್ಷಣಕೊಮ್ಮೆ ಬಣ್ಣ ಬದಲಾಯಿಸುವ ಭಾವನೆಗಳೊಂದಿಗೆ ಬೆರೆಯುತ್ತ ಇನ್ನೆಷ್ಟು ದಿನ ಹೀಗೆ ಎಂದು ಉತ್ತರವಿರದ ಪ್ರಶ್ನೆಗಳನ್ನು ಒಬ್ಬರಿಗೊಬ್ಬರು ಕೇಳುತ್ತ ದಿನ ದೂಡುವಂತಾಗಿದೆ.ಹಾಗೆ ನೋಡಿದರೆ ರೋಗ ಯಾರಿಗೂ ಹೊಸದಲ್ಲ .ರೋಗ ಇರದ ಮನುಷ್ಯ ನಿರಲು ಸಾಧ್ಯವೇ ,! ಕೆಮ್ಮು ನೆಗಡಿಯಂತ ಸಾಮಾನ್ಯ ರೋಗವೆ ರೋಕ್ಷವಾಗಿ ಬೆಳೆದು ಕಂಗೆಡುವಂತಾಗಿದೆ. ನನಗೂ ನೆಗಡಿಗೂ ಅವಿನಾಭಾವ ಸಂಬಂಧ.ವರ್ಷದ ಎಲ್ಲಾ ದಿನಗಳು ಅದು ನನಗೆ ಆಪ್ತ.ಇಷ್ಟು ವರ್ಷಗಳ ಸಂಗಾತಿಯಾದ ಅದರ ಮೇಲಿನ ಮುನಿಸು ಮಾಯವಾಗಿ ಅದರ ಉಪದ್ರವ ಸಹಿಸಿಕೊಳ್ಳುವದು ಕಲಿತಿದ್ದೆನೆ.ಹತ್ತು ಹದಿನಾರು ವಸ್ತುಗಳ ಅಲರ್ಜಿ ಇರುವ ನನ್ನ ಶರಿರಕ್ಕೆ ಆ ವಸ್ತುವಿನ ಸಂಪರ್ಕಕ್ಕೆ ಬಂದ ತಕ್ಷಣ ಸೀನುಗಳು ಜ್ಞಾಪಿಸುತ್ತವೆ .ತಕ್ಷಣವೇ ಎಚ್ಚೆತ್ತುಕೊಂಡು ಆ ವಸ್ತುವಿನಿಂದ ದೂರವಿರುತ್ತೆನೆ .ಆದರೂ ನನ್ನ ಸೀನುಗಳು ಮುನಿದು ಆ ಮುನಿಸು ಹೊರಹಾಕದೆ ಬಿಡವು . ಮೊದಮೊದಲು ನನ್ನ ಅಲರ್ಜಿ ಸೀನುಗಳನ್ನು ಗಂಭಿರವಾಗಿ ಪರಿಗಣಿಸುತ್ತಿದ್ದ ಮನೆಯವರು ಈಗೀಗ ಅದೊಂದು ಸಾಮಾನ್ಯ ಪ್ರಕ್ರಿಯೆ ಎಂಬಂತೆ ಕಾಣತೊಡಗಿದ್ದಾರೆ ಹೀಗಾಗಿ ಸೀನುಗಳು ನನ್ನ ಉಸಿರಾಟದಷ್ಟೆ ಸಾಮಾನ್ಯವಾಗಿರುವವು ನನಗೆ. ಆದರೆ ನಮ್ಮೆಜಮಾನರು ಇದಕ್ಕೆ ತದ್ವಿರುದ್ಧ ,ಒಂದೇ ಒಂದು ಸೀನು ಬಂದರು ಆಕಾಶವೆ ತಲೆ ಮೇಲೆ ಬಿದ್ದಂತೆ ಮೈ ಮುಖಕ್ಕೆಲ್ಲ ವಿಕ್ಸ ಬಳಿದುಕೊಂಡು ಮುಸುಕೆಳೆದು ಮಲಗಿಬೀಡೋರು. ಆ ರಂಪಾಟ ಮುಲುಗಾಟ ,ಮಾತ್ರೆಗಳು ಸಿರಪ್ ಗಳು, ಬಂದ ನೆಗಡಿಯನ್ನು ಆದಷ್ಟೂ ಬೇಗ ಓಡಿಸುವ ಧಾವಂತ ಆದರೂ ಜಪ್ಪಯ್ಯ ಎಂದರೂ ಜಗ್ಗದ ನೆಗಡಿ ಬಂದು ನಾಲ್ಕೈದು ದಿನ ಇದ್ದು ಆತಿಥ್ಯ ಸ್ವೀಕರಿಸಿಯೇ ಹೊಗುವದು.ಅದು ಇರುವವರೆಗೂ ಮನೆ ಒಂದು ಜಾತ್ರಯೇ ,ಬಿಸಿ ನೀರು ಕುಡಿಯುವದು ,ವಿಕ್ಸ ಹಾಕಿ ಹಬೆ ತೆಗೆದುಕೊಂಡು ಮುಖವೆಲ್ಲ ಕೆಂಪಗೆ ಮಾಡಿಕೊಂಡು ಹೋಂಕರಿಸುತ್ತ ,ಸೂರು ಹಾರಿಹೋಗುವಂತೆ ಸೀನುತ್ತ ಪರದಾಡುವದು ನೋಡಿದರೆ ನನಗೆ ಬರುವ ಸೀನುಗಳು ನಿರುಪದ್ರವಿಗಳೊ ಅಥವಾ ನಾನೇ ಅವುಗಳಿಗೆ ಒಗ್ಗಿಕೊಂಡಿರುವೆನೊ ತಿಳಿಯದು. ನೆಗಡಿ ಯಾವಾಗಲೂ ಆಪ್ತ ಕಾಯಿಲೆ ,ಒಬ್ಬರಿಗೆ ಬಂದರೆ ಮತ್ತೊಬ್ಬರನ್ನು ಸೆಳೆಯುತ್ತದೆ.ಕಣ್ಣು ಮೂಗಿನಲ್ಲಿ ಸುರಿಯುವ ನೀರನ್ನು ಸೊರ್ ಸಿರ್ ಎಂದೆನಿಸುತ್ತ ಕೆಂಪೇರಿದ ಮುಖವನ್ನು ನೋಡಿದವರು ಅಯ್ಯೊ ಎಂದು ಅನುಕಂಪ ತೊರಿಸಿ ನಮಗಾಗಿ ಮರಗುವರು ,ಅಂತಹ ಸಂದರ್ಭದಲ್ಲಿ ನಮ್ಮ ಕೆಲಸ ಕಾರ್ಯ ಗಳಿಗೂ ವಿನಾಯ್ತಿ ದೊರಕಿಸಿ ಕೊಡುವರು.ಎದುರಿನವರ ಪ್ರೀತಿಯ ಸ್ಪಂದನೆಗೆ ಮುದವಾದ ಮನ ನೆಗಡಿಯನ್ನು ಅಪಾಯ್ಯಮಾನವಾಗಿ ಅಪ್ಪಿಕೊಳ್ಳುವದು. ಕೆಲವರು ನೆಗಡಿ ಬಂದರೆ ಊಟ ತಿಂಡಿ ಬಿಟ್ಟು ಮುಷ್ಕರ ಹೂಡಿದಂತೆ ಇದ್ದು ಬಿಡುವರು.ನನಗೋ ನೆಗಡಿ ಬಂದರೆ ಬೇರೆ ದಿನಗಳಿಗಿಂತ ಹೆಚ್ಚಾಗಿ ತಿನ್ನುವ ಚಪಲವಾಗುತ್ತದೆ.ನೆಗಡಿಯಿಂದ ರುಚಿ ವಾಸನೆ ಕಳೆದುಕೊಂಡ ಗ್ರಂಥಿಗಳ ಚಿಗುರುವಿಕೆಗೆ ಹೊಸ ಬಗೆಯ ಖಾದ್ಯಗಳ ಸಮಾರಾಧನೆಯಾಗಲೆಬೇಕು .ಬೇರೆಲ್ಲಾ ರೋಗಗಳಿಗೆ ಉಟದಲ್ಲಿ ಪಥ್ಯ ಅನುಸರಿಸಿದರೆ ನೆಗಡಿಗೆ ಪಥ್ಯವೆ ಇಲ್ಲ.ಬಾಯಿ ರುಚಿ ಕೆಟ್ಟಿದೆಯೆಂದು ಹೇರಳವಾಗಿ ಉಪ್ಪು ಹುಳಿ ಖಾರದ ಅಡುಗೆಗಳು ಸಿಹಿ ಪದಾರ್ಥಗಳು ಎಗ್ಗಿಲ್ಲದೆ ಸೇವಿಸುತ್ತ ಹಾಗೆ ಸೀನುತ್ತ ,ಎಲ್ಲರಿಗೂ ನೆಗಡಿಯಾಗಿದೆ ಆರಾಮಿಲ್ಲ ಎಂದು ಹೇಳುತ್ತಲೆ ನೆಗಡಿಯನ್ನು ಪ್ರೀತಿಸುವ ಪ್ರತಿಯೊಬ್ಬರು ಇಲ್ಲಿವರೆಗೆ ನೆಗಡಿ ಒಂದು ರೋಗ ಎಂದು ಪರಿಗಣಿಸಿದ್ದೆ ಇಲ್ಲ. ಯಾವಾಗಾ ಈ ಕರೋನ ಮಾರಿ ಕಾಲಿಟ್ಟಿತ್ತೊ ನನ್ನ ಪ್ರೀತಿ ಪಾತ್ರ ನೆಗಡಿ ಎಲ್ಲರ ಕಂಗೆಣ್ಣಿಗೆ ಗುರಿಯಾಯಿತು.ಈಗ ಪ್ರತಿಯೊಬ್ಬರ ಕೆಮ್ಮು ಸೀನುಗಳು ಅನುಮಾನದಿಂದ ನೋಡುವಂತಾಗಿದೆ.ಕೆಲವೊಮ್ಮೆ ಒಗ್ಗರಣೆಯಿಂದ ಬರುವ ಸೀನುಗಳನ್ನು ಪ್ರಯತ್ನ ಪೂರ್ವ ಕವಾಗಿ ತಡೆಹಿಡಿಯುವ ಮನಸ್ಸಾಗುತ್ತಿದೆ. ಯಾರಾದರೂ ಕೇಳಿದರೆ ಅನುಮಾನ ಪಟ್ಟುಕೊಳ್ಳುವರು ಎಂಬ ಭಯದಿಂದ. ಮೊದಲೆಲ್ಲ ನೆಗಡಿಯಾದರೆ ಮನೆಯವರ ಅನುಕಂಪಕ್ಕೆ ಪಾತ್ರಳಾಗುತಿದ್ದ ನಾನು ,ಈಗ ಒಂದೇ ಒಂದು ಸೀನಿದರು ಎದುರಿನವರ ಕಣ್ಣಲ್ಲಿ ನೂರೆಂಟು ಪ್ರಶ್ನೆಗಳು ! ಅಂತಹುದರಲ್ಲಿ ಉಪದೇಶ ಬೇರೆ ,ಜಾಸ್ತಿ ಸೀನಬೇಡ ,ಯಾರಾದರು ಅಕ್ಕ ಪಕ್ಕದವರು ಕಂಪ್ಲೆಂಟ ಮಾಡಿದರೆ ಹೋಂ ಕಾರೈಂಟೈನ ನಲ್ಲಿ ಇರಬೇಕಾಗುತ್ತೆ ಎಂಬ ಅನುಮಾನ ಬೇರೆ.ಜೀವನವೆಲ್ಲ ಮನೆಯಲ್ಲೇ ಕಳೆಯುವ ನಾವು ಗೃಹಿಣಿ ಯರಿಗೆ ಮನೆ ಎಂದೂ ಬಂಧನ ಎನಿಸಿದ್ದೆ ಇಲ್ಲ. ಈಗ ಗೃಹಬಂಧನದಲ್ಲಿರುವ ಪುರುಷರಿಗೆ ಸ್ವಲ್ಪ ವಾದರೂ ಅರ್ಥ ವಾಗಿರಬೇಕು ,ದಿನವೆಲ್ಲ ಮನೆಯಲ್ಲಿ ಏನು ಮಾಡುತ್ತಿ ಎಂಬ ಪ್ರಶ್ನೆಯ ಉತ್ತರ. ಇಲ್ಲಿಯವರೆಗ ನೆಗಡಿ ಕೆಮ್ಮಿಗೆ ಪ್ರತ್ಯಕವಾದ ಔಷಧ ಲಭ್ಯವಿಲ್ಲ.ಅದು ಸರದಿಯಂತೆ ಬರುತ್ತದೆ ನಿರ್ಗಮಿಸುತ್ತದೆ. ಸಭೆ ಸಮಾರಂಭ ಜಾತ್ರಗಳಲ್ಲಿ ಹಿಂಡು ಹಿಂಡಾಗಿ ಓಡಾಡುತ್ತ ಒಬ್ಬರ ಬೆನ್ನಿಂದ ಒಬ್ಬರು ಸೀನುತ್ತ ಸಂಚರಿಸುವ ನಾವು ,ಮತ್ತೊಬ್ಬರು ಸಮೀಪವಾಗಿರುವಾಗಲೂ ದೂರ ನಿಂತು ಸೀನಬೇಕೆಂಬ ಕಲ್ಪನೆಯು ಇರದೆ ಆಕ್ಷಿಇ ..ಎಂದು ಸೀನಿದಾಗಲೂ ಇದೊಂದು ಸಾಮನ್ಯ ಪ್ರಕ್ರಿಯೆ ಎಂಬಂತೆ ನೋಡಿದ ನಮಗೆ ಈಗಿನ ಸಾಮಾಜಿಕ ಅಂತರ ಅರಗಿಸಿಕೊಳ್ಳಲು ಹಿಂಸೆಯಾಗುತ್ತಿದೆ. ಅದರೂ ಈ ಮಹಾಮಾರಿಯನ್ನು ನಿರ್ಮೂಲನೆ ಮಾಡಲು ಇವುಗಳನ್ನು ಅನುಸರಿಸದೆ ಬೇರೆ ದಾರಿಯಿಲ್ಲ. ಮತ್ತೊಬ್ಬರಿಂದ ನಮಗೆ ರೋಗ ಅಂಟಬಾರದು ಎಂದು ತಗೆದುಕೊಳ್ಳುವ ಮುಂಜಾಗ್ರತೆಯೊಂದಿಗೆ ನಮಗೆ ಬಂದಿದ್ದನ್ನು ಮತ್ತೊಬ್ಬರಿಗೆ ಹರಡದಂತೆ ಎಚ್ಚರವಹಿಸುವದು ತುಂಬಾ ಮುಖ್ಯವಾಗಿದೆ. **********************

ಪ್ರಬಂಧ Read Post »

ಕಾವ್ಯಯಾನ

ಕಾವ್ಯಯಾನ

ಕ್ವಾರಂಟೈನ್ ದಿನಗಳಿವು ಶಾಲಿನಿ ಆರ್. ಅಮ್ಮನ ಆ ಮೂರು ದಿನ ಕಾಗೆ ಮುಟ್ಟಿದೆ ಮುಟ್ಟ ಬೇಡ ಎಂದು ದೂರ ಕುಳಿತ ಮುಟ್ಟಿನ ಆ ದಿನ, ಇಂದು ನಾನೆ ಯಾರನ್ನು ಮುಟ್ಟಿಸಿಕೊಳದೆ ದೂರದಿ ನಿಂತು  ದಿನ ದೂಡುತಿರು ಕ್ವಾರಂಟೈನ್ ದಿನ, ತರಕಾರಿ ಕೊಳ್ಳುವಾಗ ಮಾರುವವನಿಗಿಂತ ಮಾರು ದೂರ ನಿಂತು ಕೊಳ್ಳುವ ಕ್ವಾರಂಟೈನ್ ದಿನ, ದಿನಸಿ ಸಾಮಾನಿನ ಖರೀದಿಗೂ ಬಂದಿದೆ ಕೊಡುವ ಕೊಳ್ಳುವವನ ಮಧ್ಯೆ ಲಕ್ಣ್ಮಣರೇಖೆಯ ಕ್ವಾರಂಟೈನ್ ದಿನ ಪ್ರತಿಯೊಬ್ಬರ ಮಧ್ಯೆದಲ್ಲೂ ಸಿಲುಕಿ ನಲುಗುತಿದೆ ಮುಗಿಯಲಾರದೆ ನರಳುತಿದೆ ಕ್ವಾರಂಟೈನ್ ದಿನ, ಹತ್ತಿರದವರನ್ನು ದೂರವಿರಿಸಿ ದೂರ ಇರುವವರನ್ನು ದೂರವೇ ಬಯಸಿ ಮರೆಯಿತಿರುವ ಕ್ವಾರಂಟೈನ್ ದಿನ., ಕಸ ಗುಡಿಸುವಾಗ ನೆಲ ಒರೆಸುವಾಗ ಪಾತ್ರೆಗಳ ತೋಳೆಯುವಾಗೆಲ್ಲ ಕೆಲಸದವಳ  ನೆನಪು ಇದು ಕ್ವಾರಂಟೈನ್ ದಿನ ಎಲ್ಲರ ಮನೆಯ ತಾರಸಿಯ ಮೇಲೆ ನಕ್ಕು ನಲಿಯುತಿದೆ ಮುಟ್ಟಿಯು ಮುಟ್ಟಲಾರದಂತಹ ಕ್ವಾರಂಟೈನ್ ದಿನ, ಮುಟ್ಟಿದ  ಪ್ರತಿ ತಪ್ಪಿಗೂ ಪದೇ ಪದೇ ಸ್ಯಾನಿಟೈಜರ್ ಉಪಯೋಗಿಸಿ ಮತ್ತೆ ಮತ್ತೆ ಕೈ ತೊಳೆವ ಕ್ವಾರಂಟೈನ್ ದಿನ ಮುಗಿಯದ ಮಕ್ಕಳ ಕಲರವ ಮುಳುಗಿದೆ ಮನೆಯು ಇವರ ಆಫೀಸಿನ ತರಹ ಅಡುಗೆ ಮನೆಗೆ ಬಿಡುವಿಲ್ಲವಂತೆ ಇದು ಕ್ವಾರಂಟೈನ್ ದಿನ, ಇದ್ದ ಅಲ್ಪ ಸ್ವಲ್ಪ ನನ್ನ ಗಳಿಗೆಗಳು ಇಲ್ಲವಾದ ದಿನ ಮಳೆಹನಿಗೆ ಕೈಒಡ್ಡದ ಹಸಿರ ಹವೆಗೆ ಮೈತಾಗದ ಇದು ಕ್ವಾರಂಟೈನ್ ದಿನ… ಆದರೂ ನನ್ನ ನಾ ಅರಿವ ನನ್ನವರೆಲ್ಲ ಹಗಲಿರುಳು ಒಂದಾಗಿ , ಒಂದೇ ಸೂರಿನಡಿಯಲಿ ನಕ್ಕು ನಲಿದು, ತುತ್ತು ಉಣಿಸಿ ಮೆರೆಯುತಿರುವ ಅಭಿಮಾನದ ಕ್ವಾರಂಟೈನ್ ದಿನ… ********** ಕಸ ಗುಡಿಸುವಾಗ ನೆಲ ಒರೆಸುವಾಗ ಪಾತ್ರೆಗಳ ತೋಳೆಯುವಾಗೆಲ್ಲ ಕೆಲಸದವಳ  ನೆನಪು ಇದು ಕ್ವಾರಂಟೈನ್ ದಿನ ಎಲ್ಲರ ಮನೆಯ ತಾರಸಿಯ ಮೇಲೆ ನಕ್ಕು ನಲಿಯುತಿದೆ ಮುಟ್ಟಿಯು ಮುಟ್ಟಲಾರದಂತಹ ಕ್ವಾರಂಟೈನ್ ದಿನ, ಮುಟ್ಟಿದ  ಪ್ರತಿ ತಪ್ಪಿಗೂ ಪದೇ ಪದೇ ಸ್ಯಾನಿಟೈಜರ್ ಉಪಯೋಗಿಸಿ ಮತ್ತೆ ಮತ್ತೆ ಕೈ ತೊಳೆವ ಕ್ವಾರಂಟೈನ್ ದಿನ ಮುಗಿಯದ ಮಕ್ಕಳ ಕಲರವ ಮುಳುಗಿದೆ ಮನೆಯು ಇವರ ಆಫೀಸಿನ ತರಹ ಅಡುಗೆ ಮನೆಗೆ ಬಿಡುವಿಲ್ಲವಂತೆ ಇದು ಕ್ವಾರಂಟೈನ್ ದಿನ, ಇದ್ದ ಅಲ್ಪ ಸ್ವಲ್ಪ ನನ್ನ ಗಳಿಗೆಗಳು ಇಲ್ಲವಾದ ದಿನ ಮಳೆಹನಿಗೆ ಕೈಒಡ್ಡದ ಹಸಿರ ಹವೆಗೆ ಮೈತಾಗದ ಇದು ಕ್ವಾರಂಟೈನ್ ದಿನ… ಆದರೂ ನನ್ನ ನಾ ಅರಿವ ನನ್ನವರೆಲ್ಲ ಹಗಲಿರುಳು ಒಂದಾಗಿ , ಒಂದೇ ಸೂರಿನಡಿಯಲಿ ನಕ್ಕು ನಲಿದು, ತುತ್ತು ಉಣಿಸಿ ಮೆರೆಯುತಿರುವ ಅಭಿಮಾನದ ಕ್ವಾರಂಟೈನ್ ದಿನ…

ಕಾವ್ಯಯಾನ Read Post »

ಪುಸ್ತಕ ಸಂಗಾತಿ

ನಾನು ಓದಿದ ಪುಸ್ತಕ

ನಕ್ಷತ್ರ ಸೂಕ್ತ  ಡಾಕ್ಟರ್ ಅನಸೂಯಾದೇವಿ  ನಕ್ಷತ್ರ ಸೂಕ್ತ  ಲೇಖಕಿ ಡಾಕ್ಟರ್ ಅನಸೂಯಾದೇವಿ  ಪ್ರಕಾಶಕರು ಶ್ರೀ ಅನ್ನಪೂರ್ಣ ಪ್ರಕಾಶನ ಅಗ್ರಹಾರ ದಾಸರಹಳ್ಳಿ ಬೆಂಗಳೂರು ೫೦೦೦೭೯  ಮೊದಲ ಮುದ್ರಣ ೨೦೧೪ ಬೆಲೆ ರೂ.೧೫೦/ ಮೂರು ಪ್ರಬುದ್ಧ ಮುಖ್ಯಪಾತ್ರಗಳ ಸುತ್ತ ತಿರುಗುವ ಕಥೆ .ಅಡಿ ಟಿಪ್ಪಣಿ ಹೇಳುತ್ತದೆ “ನನಗೊಂದು ಮಗು ಬೇಕು” ನಾಯಕಿ ಮಾರ್ದವಿ ಸಂಗೀತಗಾರಳು ವಿದ್ಯಾವಂತೆ ಹಾಗೂ ಸೌಮ್ಯ ಸ್ವಭಾವದ ರೂಪಸಿ .ಅವಳ ಪ್ರತಿ ಮಧುಕರ ಕಾಲೇಜು ಉಪನ್ಯಾಸಕನಾಗಿದ್ದವನು  ಹಾಗೂ ದೇವಾಲಯದ ಅರ್ಚಕ ಸಂಸ್ಕೃತ ವಿದ್ವಾಂಸ ಹಾಗೂ ಪಿ.ಎಚ್.ಡಿ. ಬರೆಯುತ್ತಿರುವ ಭಾಸ್ಕರ ಸೋಮಯಾಜಿ. ಅವರ ಕಥೆಗೆ ಹಿರಿಯರ ಕಾಲದ ಶಾಪದ ವೃತ್ತಾಂತ ಆಸ್ತಿಗಾಗಿ ಅಣ್ಣತಮ್ಮಂದಿರ ದ್ವೇಷ ಕಲಹಗಳ ಹಿನ್ನೆಲೆ ತೆಗೆದುಕೊಂಡು ವಿವರಿಸುತ್ತಾ ಹೋಗುವ ಕಥೆಯ ಎಳೆ. ಇತ್ತೀಚಿನ ದಿನಗಳಲ್ಲಿ ಒಂದೇ ಗುಕ್ಕಿನಲ್ಲಿ ಓದಿ ಮುಗಿಸಿದ ಕಾದಂಬರಿ ಇದು.  ಬಾಲವಿಧವೆ ರಾಧಜ್ಜಿಯ ಹಕ್ಕಿಗಳೊಡನಿನ ಸಂಭಾಷಣೆ, ಅಣ್ಣನ ಮೋಸಕ್ಕೆ ಬಲಿಯಾದ ಶಾಂತಾರಾಮಜ್ಜ, ಅನ್ಯಾಯಕ್ಕೆ ಈಡಾಗಿ ವಿಷ ಕುಡಿದು ವಂಶಕ್ಕೆ ಶಾಪ ಕೊಟ್ಟ ಶಾಂತಾರಾಮನ ಪತ್ನಿ ಜಯಲಕ್ಷ್ಮಿ ಈ ಪಾತ್ರಗಳು ನೆನಪಿನಲ್ಲಿ ಉಳಿಯುತ್ತವೆ. ಪ್ರತಿಯೊಂದು ಮನೆತನದಲ್ಲಿ ಹುಡುಕಿದರೆ ಇಂತಹ ಕಥೆಗಳು ಸಿಗಬಹುದೇನೋ. ಆದರೆ ತಮ್ಮ ಪಾಪದ ಫಲ ಇಂದಿನ ತಮ್ಮ ಅವಸ್ಥೆ ಎಂದರಿಯುವವರು ಮಾತ್ರ ಇರುವುದಿಲ್ಲ.   ಪೂರ್ಣ ಕಥೆಯನ್ನು ವಿವರಿಸಿ ನಿಮ್ಮ ಕುತೂಹಲಕ್ಕೆ ಭಂಗ ತರುವುದಿಲ್ಲ ನಾನು.  ಓದಿಯೇ ತೀರಬೇಕು ಅದರ ಆಸ್ವಾದ ಅರಿಯಲು. ಮುನ್ನುಡಿಯಲ್ಲಿ ಡಾಕ್ಟರ್ ಟಿ ಎ ಬಾಲಕೃಷ್ಣ ಅಡಿಗರು ಹೇಳಿರುವಂತೆ ” ಭಾವ ಬೆಳಕು ಭಾವಲೋಕ, ಭಾವವಲಯ, ಭಾವಸಂಗಾತಿ ಭಾವ ತೇವತೆ ಭಾವ ಜಟಿಲತೆ ಈ ಎಲ್ಲಾ ಪದಗಳನ್ನು ಲೇಖಕಿಯು ಬಳಸುವಲ್ಲಿ ಅವರು ಸೃಷ್ಟಿಸಿರುವ ಭಾವಜಗತ್ತನ್ನು ಅರ್ಥೈಸಿಕೊಳ್ಳುವಲ್ಲಿ ಈ ಕಾದಂಬರಿಯ ಓದುಗನಿಗೂ ಕೂಡ ವಿಶೇಷ ಭಾವ ಸಂಸ್ಕಾರವಿದ್ದರೆ ಒಳಿತು “. ನಿಜ ತಮ್ಮ  ಭಾವ ತೀವ್ರತೆ ಇರುವ ಬರವಣಿಗೆಯಿಂದ ಲೇಖಕಿ ನೇರ ಓದುಗನ ಹೃದಯದಾಳಕ್ಕೆ ಲಗ್ಗೆಯಿಡುತ್ತಾರೆ . ಬಳಸಿರುವ ಭಾಷೆಯ ಮೇಲಿನ ಹಿಡಿತ ಜೊತೆಯಾಗಿರುವ ಸಂಗೀತ ಸಾಹಿತ್ಯ ಉದ್ದರಣೆಗಳು ಕಥೆಯ ಓಘಕ್ಕೆ ಇಂಬು ಕೊಡುತ್ತ ಹೋಗುತ್ತದೆ. ಪ್ರಾಚೀನ ಹಾಗೂ ಅರ್ವಾಚೀನ ಸಂಗತಿಗಳ ನಡುವಣ ಸಾಮರಸ್ಯ ,ಉದಾಹರಣೆಗೆ ನಿಯೋಗ ಪದ್ಧತಿ ಮತ್ತ ಐವಿಎಫ್, ವೇದ ಕಾಲದ ಸೂಕ್ತಗಳು ಹಾಗೂ ಮೊಹೆಂಜದಾರೋ ಮುದ್ರೆಗಳ ನಡುವಣ ಸಾಮ್ಯತೆ ಹಾಗೂ ಅಧ್ಯಯನ ಎಲ್ಲವೂ ಕಥೆಗೆ ಪೂರಕವಾಗುತ್ತಾ ಸಾಗುತ್ತದೆ . ಲೇಖಕಿ ಸ್ವತಃ ಗಾಯಕಿಯೂ ಹೌದು. ಆದ್ದರಿಂದ ನಾಯಕಿಯ ಗಾಯನ ಆಗಿನ ಅವಳ ಮನಃಸ್ಥಿತಿಗಳನ್ನು ಕಣ್ಣಿಗೆ ಕಟ್ಟುವಂತೆ ಮನಕ್ಕೆ ನಾಟುವಂತೆ ಚಿತ್ರಿಸಿದ್ದಾರೆ.  ಹೆಣ್ಣಿನ ಜನ್ಮದ ಸಾಫಲ್ಯ ತಾಯ್ತನ .ಪ್ರತಿ ಹೆಣ್ಮನವೂ “ನನಗೊಂದು ಮಗು ಬೇಕು” ಎಂದು ಹಂಬಲಿಸುತ್ತಲೇ ಇರುತ್ತದೆ.  ಆ ತುಡಿತ ಮಿಡಿತದ ಹಪಾಹಪಿ ಹಾಗೂ ಅದನ್ನು ಪೂರೈಸಿಕೊಳ್ಳುವ ವಿಧಾನ ಇದು ಕಥಾವಸ್ತು. ಆದರೆ ಅದನ್ನು ಹಿಡಿದಿಟ್ಟಿರುವ ಲೇಖಕಿಯ ಅನನ್ಯತೆಗೆ ಶರಣು ಅನ್ನಲೇಬೇಕು. ಚರ್ವಿತ ಚರ್ವಣವಾಗದೆ ಹೀಗೆ ಆಗಬಹುದು ಎಂದು ಊಹಿಸಲಾಗದ, ಹೀಗೂ ಆಗಬಹುದು ಎಂದು ನಿರೂಪಿಸಿರುವ ಶೈಲಿ ತುಂಬಾ ಮನಕ್ಕೆ ಮುಟ್ಟಿತು ಆಪ್ಯಾಯವಾಯಿತು ಆಪ್ತವಾಯಿತು . ಕಾದಂಬರಿಯ ಈ ಸಾಲುಗಳು  ಸ್ತ್ರೀ ಸಮಾನತೆ ಸ್ವಾತಂತ್ರ್ಯ  ಪರವಾದವರಿಗೆ ಸಮಾಧಾನವನ್ನೂ ನೀಡಬಹುದು.  “ಬೀಜವೊಂದನ್ನೇ ವಂಶ ಮೂಲವೆಂದು ಗುರುತಿಸುವುದೇಕೆ?  ಕ್ಷೇತ್ರವನ್ನೇಕೆ ವಂಶ ಪಾರಂಪರಿಕೆಯಾಗಿ ಪರಿಗಣಿಸಬಾರದು? ಕ್ಷೇತ್ರವಿಲ್ಲದೆ ಬೀಜವೊಂದರಿಂದಲೇ ವಂಶ ಬೆಳೆಯುತ್ತದೆಯೇ ?” ಮಾರ್ದವಿ ಬೆಟ್ಟಕ್ಕೆ ತೆರಳುವ ಸಂದರ್ಭದಲ್ಲಿ ಕೋತಿಗಳು ಎದುರಾಗುವ ಸಂದರ್ಭವನ್ನು ತುಂಬಾ ಸಾಂಕೇತಿಕವಾಗಿ ಬಳಸಿಕೊಳ್ಳಲಾಗಿದೆ.  ಹಾಗೆಯೇ ಮಾರ್ದವಿಗೆ ಬೀಳುವ ಕನಸಿನ ವಿವರವೂ ಸಹ . ಮಧ್ಯೆ ಬರುವ ಭಾವ ಗೀತೆಗಳ ಸಾಲುಗಳು ರಾಗಗಳ ವರ್ಣನೆ ಅಬ್ಬಾ ಒಂದು ಸಂಪೂರ್ಣ ಭಾವಮಯ ಭಾವುಕ ಜೀವಿಗಳ ಭಾವ ಬಣ್ಣನೆ! . ಶಿಥಿಲಗೊಳ್ಳುತ್ತಿರುವ ಕೌಟುಂಬಿಕ ಸಂಬಂಧಗಳು,ಹೆಚ್ಚುತ್ತಿರುವ ವಿಷಮ ಸಂಸಾರಗಳು ವಿವಾಹೇತರ ಸಂಬಂಧಗಳ ಮಧ್ಯದಲ್ಲಿ ಇಂತಹ ಕಾದಂಬರಿಗಳು ಹೆಚ್ಚು ಮೌಲಿಕವಾಗುತ್ತದೆ. ಸಮಾಜಕ್ಕೆ ಮಹತ್ವದ ಸಂದೇಶವನ್ನು ನೀಡುವಲ್ಲಿ ಸಹಕಾರಿಯಾಗುತ್ತದೆ ಸಫಲವೂ ಆಗುತ್ತವೆ . ********* ಸುಜಾತಾ ರವೀಶ್

ನಾನು ಓದಿದ ಪುಸ್ತಕ Read Post »

ಕಾವ್ಯಯಾನ

ಕಾವ್ಯಯಾನ

ಮುಗಿಯದ ಹಾಡು ಎನ್.ಶೈಲಜಾ ಹಾಸನ ಇಡುವ ಹೆಜ್ಜೆ ಜೊತೆ ಜೊತೆಹೆಜ್ಜೆ ಕೂಡಿದ ಪಲುಕುಪರಿ ಪರಿಯ ಕುಲುಕುನಾನೆಂತು ಬಣ್ಣಿಸಲಿನೀ ಒಲಿದೆ,ನನ್ನ ಒಲಿಸಿದೆಬೆಸೆದಿದೆ ಬಂಧನಮನವೀಗ ಹೂ ನಂದನ  ಒಲವ ಬಂಧನದಿ ಸುಖವಿದೆಸಿರಿಯಿದೆ,ಮಧುವಿದೆ,ಸವಿಯಿದೆನಡೆದ ಹಾದಿಯಲ್ಲಿಬಣ್ಣಗಳ ಚೆಲುವಿದೆ ಮೌನದ ಹಾಡಲಿನೂರು ಕವಿತೆಕಣ್ಣ ಬೆಳಕಲಿ ಪ್ರೇಮದಣತೆನೋಟದಂಚಿನಲಿಕೋರೈಸುವ ಮಿಂಚುನೋಟದಾಳದಲಿ ನಲ್ಮೆಯ ಜಲಪಾತತುಂಟ ನಗೆಯಲಿಸಾವಿರ ಪುಳಕ ಕನಸುಗಳ ಸಾಕಾರಎದೆಯ ಗೂಡಲಿನಿನ್ನೊಲುಮೆಯಹುಚ್ಚು ನದಿಯಲಿಕೊಚ್ಚಿ ಹೋದವಳುತೇಲಿ ತೇಲಿ ತೇಲುತಲಿಇರುವ ಹುಚ್ಚು ಖೋಡಿಮನಸ್ಸು ನನ್ನದು ಮುಟ್ಟಲಾಗದು,ತಟ್ಟಲಾಗದುಮೆಟ್ಟಲಾಗದುಮುಪ್ಪಾನು ಮುಪ್ಪಿಗೆಒಲುಮೆಯ ಮನಸಿಗೆಗೆಲುವಿನ ಸೊಗಸು ದಾಂಪತ್ಯ ಗೀತೆಗೆಅನುರಾಗದ ಪಲ್ಲವಿಶೃಂಗಾರದ   ಅನುಪಲ್ಲವಿಮುಗಿಯದ ಹಾಡು ಇದು *******

ಕಾವ್ಯಯಾನ Read Post »

ಪುಸ್ತಕ ಸಂಗಾತಿ

ನಾನು ಓದಿದ ಪುಸ್ತಕ

ನೂರ್ ಇನಾಯತ್ ಖಾನ್ ಚಂದ್ರಶೇಖರ್ ಮಂಡೆಕೋಲು ಮೂರು ದಿನಗಳ ಕಾಲ ನನ್ನನು ಈ ಕೊರೋನಾ ರಜೆ ‘ನೂರ್ ಇನಾಯತ್ ಖಾನ್’ ನಾಝಿ ಹೋರಾಟದ ಆರ್ದ್ರ ಕಾವ್ಯವನ್ನು ಓದಲು ಹಚ್ಚಿತು. ನನ್ನ ಓದಿನ ಮಿತಿಯಲ್ಲಿ ನಾನು ಗ್ರಹಿಸಿದ ಕಿರು ಬರಹವಿದು.      ಧರ್ಮ ಹಾಗೂ ಜನಾಂಗ ಶ್ರೇಷ್ಠತೆಯ ಭ್ರಷ್ಠ ಸಿಂಡ್ರೋಮ್ ಇಂದು ನಿನ್ನೆಯದಲ್ಲ.ನಾಳೆ ಹೋಗುತ್ತದೆಂಬ ಖಾತ್ರಿಯೂ ಇಲ್ಲ;ಆ ಮಾತು ಬೇರೆ.ಎರಡನೇ ಜಾಗತಿಕ ಮಹಾಯುದ್ಧದಲ್ಲಿ ನಾಝಿಗಳ ನಡೆಸಿದ  ಮಾರಣ ಹೋಮಕ್ಕೆ ಯಾವತ್ತೂ ಕ್ಷಮೆ ಇಲ್ಲ.ಅತ್ಯಾಚಾರಕ್ಕೊಳಪಡಿಸಿ ಸಜೀವ ದಹಿಸುವ ಅವರ ಕ್ರೌರ್ಯವೊಂದು ಹಿಂಸೆಯೆಂಬ ಸಣ್ಣ ಪದದಲ್ಲಿ ನೋಡಲಾಗದಷ್ಟು ಭಯಂಕರ.ಇವುಗಳನ್ನೆಲ್ಲ ತಲಸ್ಪರ್ಶಿ ಅಧ್ಯಯನಗಳೊಡನೆ ಕೃತಿಕಾರ ನಮ್ಮ ಮುಂದಿಡುತ್ತಾರೆ ನೂರ್ ಳ ಬಾಲ್ಯದಲ್ಲಿ ಆಕೆಯ ತಂದೆತಾಯಿಯರು ಪ್ರಭಾವಿಸಿದ್ದನ್ನು ನಾನು ವಿಶೇಷವಾಗಿ ಗ್ರಹಿಸಿರುವೆ.ಭಾರತೀಯನಾದ ತಂದೆಯಿಂದ ಬಳುವಳಿಯಾಗಿ ಬಂದ ಸಂಗೀತ,ಕಲೆ,ಸಾಹಿತ್ಯ,ಓದು,ಬರಹಗಳು,ಸೂಫಿ ತತ್ವ ಮತ್ತು ಪ್ರವಚನಗಳು ಆಕೆಯ ಅಂತರಂಗಿಕ ವ್ಯಕ್ತಿತ್ವವನ್ನು ವಿಕಸಿಸಿದ್ದರೆ ತಾಯಿಯ ಪ್ರಭಾವದಿಂದ ಬಂದ ಪ್ರತಿರೋಧದ ಮಧ್ಯೆಯೂ ಕೆಚ್ಚಿನಿಂದ ಬದುಕುವ ಛಲ,ಕಷ್ಟಗಳನ್ನು ಎದುರಿಸುವ ಧೈರ್ಯ ಇವೆಲ್ಲವನ್ನು ತಾಯಿಯಿಂದ ಬಂದದ್ದೆಂದು ಗುರುತಿಸಬಹುದು.ಆ ಕಾರಣಕ್ಕಾಗಿಯೇ ಮುನ್ನುಡಿಯಲ್ಲಿ ಡಾ.ರಹಮತ್ ತರೀಕೆರೆ ಯವರು ತಾಯಿ ನೋರಾ ಬೇಕರ್ ಅವರನ್ನು ‘ಅದೃಶ್ಯ ನಾಯಕಿ’ ಎಂದೇ ಕರೆದಿದ್ದಾರೆ.ಅತ್ಯಂತ ಪ್ರಜ್ಞಾವಂತ ನಾಗರಿಕರೆಂದು ಕರೆಯಲ್ಪಡುವ ಫ್ರೆಂಚ್ ಜನರ ಒಡನಾಟ,ಅಲ್ಲಿಯ ಶಿಕ್ಷಣ,ಬ್ರಿಟನ್ ಕಲಿಸಿಕೊಟ್ಟ ಅನೇಕ ಅನುಭವಗಳು,ಸೂಕ್ಷ್ಮ ಹಾಗೂ ಸಂವೇದನಪೂರ್ಣವೂ ಅತ್ಯಂತ ಪ್ರ್ಯಾಕ್ಟಿಕಲ್ ಆಗಿ ಬದುಕುವ ಚಾಕಚಕ್ಯತೆಯನ್ನು ಮೈಗೂಡಿಸಿಕೊಳ್ಳಲು ಸಾಧ್ಯವಾದದ್ದು ಅವಳಿಗೆ ದೊರೆತ ಶಿಕ್ಷಣದಿಂದ ಎಂದು ಗ್ರಹಿಸಬಹುದು.ಭಾವನಾತ್ಮಕ ಹಿನ್ನೆಲೆಯಲ್ಲಿ ನೋಡಿದರೆ ಈಕೆ ಟಿಪ್ಪು ವಂಶಸ್ಥಳಾಗಿರುವುದರಿಂದ ನಮ್ಮ ನೆಲದವಳೆಂಬ ಹೆಮ್ಮೆ ಸಹಜ.ಆದರೆ ಆ ವಂಶಸ್ಥರ ಗುಣವೊಂದೇ ಈಕೆಯನ್ನು ಹೋರಾಟಗಾರ್ತಿಯನ್ನಾಗಿ ರೂಪಿಸಿತೆ?ಆ ಹಿನ್ನೆಲೆಯಲ್ಲಿ ಈ ಕೃತಿಯನ್ನೋದುವಾಗ ಆಕೆಯ ವಿದೇಶಿ ಶಿಕ್ಷಣ, ತಾಯಿಯ ಪ್ರಭಾವ,ವಿದೇಶಿ ಪರಿಸರ ಸಾಕಷ್ಟು ಪ್ರಭಾವಿಸಿ ಅವಳನ್ನು ಒಬ್ಬ ಧೀರೆಯನ್ನಾಗಿ ರೂಪಿಸಿದ್ದವೆನ್ನುವುದನ್ನು ಕೃತಿಕಾರರು ಇನ್ನಷ್ಟು ವಿವರಗಳನ್ನು ದಾಖಲಿಸಬಹುದಿತ್ತೇನೊ ಅನಿಸಿತು. ನಾಝಿಗಳ ಕ್ರೌರ್ಯ,ಯುದ್ಧ ಷಡ್ಯಂತ್ರಗಳು,ಯುದ್ಧಕಾಲದ ಭೀಬತ್ಸ ಇವನ್ನೆಲ್ಲ ಯುದ್ಧಭೂಮಿಕೆಯಲಿರುವಂತೆಯೇ ಬರೆದ ಮಂಡೆಕೋಲು ಅವರು  ಮನುಷ್ಯರನ್ನು ಕೊಲ್ಲಲೆಂದೇ ಕಟ್ಟಿದ ಕಾರ್ಖಾನೆಗಳ ನಾಡು ಎಂದು ಕರೆದಿರುವುದು ಸರಿ ಎನಿಸುತ್ತದೆ.   ಕೃತಿಯು ಸಾಂಸ್ಕೃತಿಕ, ಸಾಹಿತ್ಯಕ ಹಾಗೂ ಚಾರಿತ್ರಿಕ ಪಠ್ಯವು ಆಗಿರುವುದು ಕೃತಿಕಾರನ ಜಾಣ್ಮೆಯನ್ನು ತೋರಿಸುತ್ತದೆ. ಮಂಡೆಕೋಲ ಅವರು ೨೩ ತಲೆಬರಹಗಳನ್ನು ಕೊಟ್ಟು ಪ್ರತಿಯೊಂದೂ ನಮ್ಮೊಳಗೊಂದು ಚಂದದ ಒಳನೋಟಗಳನ್ನು ಗ್ರಹಿಸುವ ಮನೋಭೂಮಿಯನ್ನು ಸಿದ್ಧಗೊಳಿಸುತ್ತವೆ.ಚರಿತ್ರೆಯ ಅಧ್ಯಯನವಾದರೂ ಭಾಷಾ ಪ್ರಯೋಗ ಸೃಜನಶೀಲ ಲೇಖಕನಂತಿದೆ.ಕೆಲವು ಸಾಲುಗಳನ್ನು ಹೈಲೈಟರ್ ನಿಂದ ಮಾರ್ಕಿಸುತ್ತ ಓದಬೇಕೆನಿಸುತ್ತದೆ. ಈ ತವರು ನೆಲದ ನೂರ್ ಟಿಪ್ಪುವಿನ ವಂಶಜಳೆಂದು ಗುರುತಿಸುವಷ್ಟೇ ಪ್ರಬಲವಾಗಿ ನೂರ್ ಳ ಅಜ್ಜ ಟಿಪ್ಪು ಎಂದು ಹೇಳಲೇಬೇಕಾದಷ್ಟು ಧೀರ ನೀರೆ ನೂರ್.ಯುದ್ಧಗಳೆಂದರೆ ಸಾಮ್ರಾಜ್ಯ ವಿಸ್ತರಣೆ ಮಾತ್ರವಲ್ಲ,ಧರ್ಮದ ಅಹಮ್ಮಿನ ಕೋಟೆಯನೆತ್ತರಿಸುವುದು ಮಾತ್ರವಲ್ಲ,ಅಸಾಧಾರಣ ಪ್ರತಿಭೆಗಳನ್ನು,ಅಸಾಮಾನ್ಯ ವ್ಯಕ್ತಿತ್ವಗಳನ್ನು,ಸಾಮಾನ್ಯರ ಬದುಕನ್ನು,ಒಂದರ್ಥದಲ್ಲಿ ಜನಾಂಗಗಳನ್ನೇ ಧ್ವಂಸಿಸಿ ಸಂಭ್ರಮಿಸುವ ಉನ್ಮಾದವೆಂದು ಅನಿಸುತ್ತದೆ. ನೂರ್ ಕುರಿತಾಗಿ ಓದಲು ಇದೊಂದು ಸುಸಂದರ್ಭ.ಜೀವಾಣುಯುದ್ಧಗಳು ನಡೆಯಬಹುದಾದ ಸಾಧ್ಯತೆಯ ಶಂಕೆಗಳನ್ನು ತಳ್ಳಿ ಹಾಕುವಂತಿಲ್ಲವೆಂಬುದನ್ನರಿಯುತ್ತ ಸ್ವಾತಂತ್ರ್ಯದ ಮಹತ್ವ ಮತ್ತು ಹೋರಾಟದ ಧೀಶಕ್ತಿಗೆ ನೂರ್ ನಮಗೆ ಬೆಳಕ ದೀಪ ಹಿಡಿದು ನಿಂತಿದ್ದಾಳೆ. ಡಾ.ರಹಮತ್ ತರೀಕೆರೆ ಅವರ ಅದ್ಭುತ ಮುನ್ನುಡಿಯಲ್ಲಿ ಹಲವು ಚಾರಿತ್ರಿಕ ವಿದ್ಯಮಾನಗಳನ್ನು ಜೋಡಿಸಿ ಕೊಟ್ಟಿದ್ದಾರೆ.ಬೆನ್ನುಡಿಯ ಕಿರು ಬರಹವಾಗಿ ಡಾ.ಪುರುಷೋತ್ತಮ ಬಿಳಿಮಲೆಯವರು ಚಂದದ ಬೆಳಕನ್ನು ರಾಷ್ಟ್ರೀಯ ಪ್ರಜ್ಞೆಯಲ್ಲಿ ಗ್ರಹಿಸಿಕೊಂಡು ಓದುವ ವರ್ತಮಾನದ ತಲ್ಲಣಗಳಿಗೆ ಎದೆಯೊಡ್ಡುವ ಬೆನ್ಬರಹವನ್ನು ಬರೆದಿದ್ದಾರೆ.ಒಟ್ಟಂದದಲಿ ಪ್ರತಿಯೊಬ್ಬರೂ ಓದವಂತಹ ಅಪರೂಪದ ಕೃತಿ.ಮಹಿಳೆಯರಂತೂ ಓದಲೇಬೇಕಾದ ಕೃತಿಯೆಂದರೆ ತಪ್ಪೆನಿಸದು.ಆದರೆ ಧೂಳು ಒರೆಸಿದ ಕನ್ನಡಕ ಧರಿಸಬೇಕಷ್ಟೆ. ಇನ್ನು ಕೃತಿಕಾರರ ಕುರಿತಾಗಿ ನಾಲ್ಕು ವಿಚಾರಗಳು.. ಒಬ್ಬ ಜೀವಪರ ಮಾತ್ರ ಮನುಷ್ಯಪ್ರೇಮದ ಒಳಹೊಕ್ಕು ಸಂವೇದನೆಗಳನ್ನು ಸಂಯೋಜಿಸಿ ಕೃತಿ ರಚಿಸಬಲ್ಲ.ಕೃತಿಕಾರ ಈ ವಿಚಾರದಲ್ಲಿ ಅಭಿನಂದನಾರ್ಹ. ಕೆಲವು ಸಾಲುಗಳಂತೂ ಕರುಳನ್ನು ತಟ್ಟುತ್ತವೆ.ಕಣ್ತೇವಗೊಳಿಸುತ್ತವೆ.ಗಂಟಲುಬ್ಬಿ ವಿಷಮಯಗೊಳಿಸಿ ಸಂಕಟಕ್ಕೆ ತಳ್ಳುತ್ತವೆ.ಇದು ನಾನು ಅನುಭವಿಸಿದ್ದು .. ಜಾಗತಿಕ ಇತಿಹಾಸದ ನಾಯಕಿ ನೂರಳಿಗೆ ಬದುಕುಳಿದಿದ್ದರೆ ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗುವ ಅದಮ್ಯ ಬಯಕೆ ಇತ್ತು.  ನೂರ್ ಕುರಿತು ಮಹತ್ವದ ದಾಖಲೆಗಳೊಡನೆ,ಶೋಧದ ಹಾದಿಯಲ್ಲಿ ಹಲವನ್ನು ಹೆಕ್ಕಿ,ಮಾಹಿತಿ ಸಂಗ್ರಹಿಸಿ ನಮ್ಮ ಮನಸ್ಸಿನಾಳಕ್ಕಿಳಿಯುವಂತೆ  ನಿಲುಕಿಸಿರುವುದು ಮಂಡೆಕೋಲು ಸರ್ ಭಾಷೆಯೊಳಗೊಂದು ಜೀವಂತಿಕೆ ಇದೆ ಎಂಬುದನ್ನು ತೋರಿಸುತ್ತದೆ.ಓದು ಮುಗಿಯುತ್ತ ಬಂದಂತೆಲ್ಲ ಕಣ್ಹನಿಗಳೊಡನೆ ಹೆಚ್ಚು ವಿನೀತ ಹಾಗೂ ಹೆಚ್ಚು ಮನುಷ್ಯಳನ್ನಾಗಿ ಮಾಡುವ ಕೃತಿಯೆಂದು ನಾನು ಅಂದುಕೊಂಡಿರುವೆ. ಗೆಳೆಯ,ಗೆಳತಿಯರೆ ತುಂಬ ಚಂದದ ನಿರೂಪಣೆಯಿಂದ ಬಹಳಷ್ಟು ಸೂಕ್ಷ್ಮ ಅಧ್ಯಯನದೊಂದಿಗೆ ಹೆಣೆದುಕೊಂಡಿರುವ ಈ ಕೃತಿಯನ್ನು ನೀವೂ ಓದಬೇಕೆಂದು ಬಯಸುವೆ. ಕೃತಿಕಾರನಿಗೊಂದು ಸಲಾಮ್.. ********** ದಾಕ್ಷಾಯಿಣಿ ವಿ.ಹುಡೇದ

ನಾನು ಓದಿದ ಪುಸ್ತಕ Read Post »

ಪುಸ್ತಕ ಸಂಗಾತಿ

ನಾ ಮೆಚ್ಚಿದ ಪುಸ್ತಕ

ಯಾದ್ ವಶೇಮ್ ನೇಮಿಚಂದ್ರ ನಾ ಮೆಚ್ಚಿದ ಪುಸ್ತಕ, ಶ್ರೀಮತಿ ನೇಮಿಚಂದ್ರ ಅವರು ಬರೆದ ಯಾದ ವಶೇಮ್’. ಈ ಪುಸ್ತಕ ಕನ್ನಡ ಸಾಪ್ತಾಹಿಕದಲ್ಲಿ ಧಾರಾವಾಹಿಯಾಗಿ ಬಂದಾಗ ಇದರ ಹೆಸರು ‘ನೂರು ಸಾವಿರ ಸಾವಿನ ನೆನಪು’ ಆಗಿತ್ತು. ಹಿಟ್ಲರನ ರಕ್ತದಾಹದ, ಅಶಾಂತಿಯ ನೆಲದಿಂದ ಗಾಂಧಿಯ ಅಹಿಂಸೆಯ ನೆಲಕ್ಕೆ ರಕ್ಷಣೆ ಮತ್ತು ಶಾಂತಿಯನ್ನು ಅರಸಿ ಬಂದ ಪುಟ್ಟ ಯಹೂದಿ ಬಾಲೆಯ ನೈಜ ಕತೆಯಿದು. ನಾನು ಈ ಪುಸ್ತಕವನ್ನು ಮೆಚ್ಚಿಕೊಳ್ಳಲು ಮೂಲ ಕಾರಣ ಕೆಳಗೆ ಬರೆದ ಐದು ಅಂಶಗಳು. ಇವು ಯಾವುದೇ ಶ್ರೇಷ್ಠ ಸಾಹಿತ್ಯ ರಚನೆಗೆ ಬೇಕಾದ ಅವಶ್ಯಕ ಅಂಶಗಳು ಕೂಡ. ೧. ದೃಷ್ಯೀಕರಣ : ಕಣ್ಣಿಗೆ ಕಟ್ಟುವಂತೆ ಚಿತ್ರಿಸಿ ಬರೆಯುವುದು. ಬೆಂಗಳೂರಿನ ಗೋರಿಪಾಳ್ಯದ ಸ್ಮಶಾನದಿಂದ ಹೊರಟು ಜರ್ಮನಿ, ಇಂಗ್ಲೆಂಡ್, ಅಮೇರಿಕಾ ಕೊನೆಗೆ ಇಸ್ರೇಲ್ ಮುಟ್ಟಿದ ನಿರಂತರ ಪ್ರವಾಸ, ಅಧ್ಯಯನ ಮತ್ತು ಆ ಕಾಲದ ಆಗುಹೋಗುಗಳ, ರಣಘಟನೆಗಳ ಸಂಶೋಧನೆಗಳನ್ನು ಎದುರಿಗೆ ತೋರಿಸುವಂತೆ ಬರೆದದ್ದು, ಚಿತ್ತದಲ್ಲಿ ಕೊರೆದು ಮನಸ್ಸಿನಲ್ಲಿ ಉಳಿಯುತ್ತದೆ. ನಾನೂ ಕೂಡ ಲೇಖಕಿಯ ಜೊತೆಗೆ ಪ್ರಯಾಣಿಸಿದ್ದೆನೇನೋ ಅನ್ನುವ ಭ್ರಾಂತಿ ಉಂಟಾಗುವಂತೆ ಬರೆದ ಅದ್ಭುತ ಶೈಲಿ. ೨. ಭಾವನೆಗಳನ್ನು ತಟ್ಟುವುದು : ಯಾದ್ ವಶೇಮ್ ಓದುವಾಗ, ಯಹೂದಿ ಬಾಲಿಕೆ ಮತ್ತವಳ ತಂದೆಯನ್ನು ಬೆನ್ನಟ್ಟಿದ ನಾಜಿಗಳ ದುಷ್ಕ್ರತ್ಯ, ಕ್ರೂರತೆ, ಹಿಂಸೆ ಹೃದಯವನ್ನು ಹಿಂಡಿಬಿಡುತ್ತದೆ. ಹೆದರಿಕೆ, ಸಂಕಟ ತಂತಾನೇ ಉಂಟಾಗಿ ಒಂದು ರೀತಿಯ ಆರ್ದ ಭಾವ ಮನದಲ್ಲಿ ಸ್ರವಿಸಿ ಕರುಣಾರಸ ಗೊತ್ತಾಗದೇ ಹರಿಯತೊಡಗುತ್ತದೆ. ಗುರಿ ತಲುಪಿ ತನ್ನವರನ್ನು ಹುಡುಕಿ ತೆಗೆದು ಶತಮಾನದಿಂದ ದೂರಾಗಿದ್ದ ಹೃದಯ ಒಂದಾದಾಗ ನಾಯಿಕೆಯ ಮತ್ತು ಲೇಖಕಿಯ ಕನಸು ನೆನಸಾಗುತ್ತದೆ. ಅವರಿಗಾದಷ್ಟೇ ಸಂತೋಷ, ಆತ್ಮತೃಪ್ತಿ ಓದುಗರೂ ಅನುಭವಿಸುತ್ತಾರೆ. ದುಃಖ ಕೊಡವಿ ಮೇಲೆದ್ದಂತೆ ಮನ ಹಗುರಾಗುತ್ತದೆ. ೩. ಭವಿಷ್ಯದ ಚಿಂತನೆ : ಯಾದ ವಶೇಮ್ ಗತಕಾಲವನ್ನು ಹೇಳುವದರೊಂದಿಗೆ ಭವಿಷ್ಯದ ಚಿಂತನೆ ಮಾಡುತ್ತದೆ. ಲೇಖಕಿಯೇ ಬರೆದಂತೆ “ಅಂದು ಹೊತ್ತಿ ಉರಿಯುತ್ತಿತ್ತು ಜರ್ಮನಿ. ನಿಂತು ನೋಡಿತ್ತು ಜಗತ್ತು. ಇಂದು ಹಿಟ್ಲರ್ ಎಲ್ಲಿ ಬೇಕಾದರೂ ಹುಟ್ಟಬಲ್ಲ, ಅಮೇರಿಕೆಯಲ್ಲಿ, ಇಸ್ರೇಲದಲ್ಲಿ, ಯುರೋಪದಲ್ಲಿ. ‘ಅಹಿಂಸೆಯೇ ಪರಮ ಧರ್ಮ’ ಎಂದು ಜಗತ್ತಿಗೆ ಸಾರಿದ ಭಾರತದಲ್ಲೂ ಕೂಡ. ನಮ್ಮ ನಡುವೆ ಎಲ್ಲಿ ಬೇಕಾದರೂ ಹುಟ್ಟಿ ಬಿಡಬಲ್ಲದು ಈ ಪೈಶಾಚಿಕ ಮನೋಭಾವದ ಉಗ್ರತಾಂಡವ. ನಮ್ಮೊಳಗೇ ಜನಿಸಿಬಿಡಬಲ್ಲ ಹಿಟ್ಲರ್ ನನ್ನು ತಡೆಹಿಡಿಯುವ ಹೊಣೆ ನಮ್ಮದು”. ಮನುಷ್ಯನ ಪಾಶವೀ ಕೃತ್ಯದ ಬಗೆಗೆ ಈ ಮಾತು ನೇಮಿಚಂದ್ರರ ಹೃದಯದಿಂದ ಬಂದದ್ದು. ಈಗ ನಡೆಯುತ್ತಿರುವ ವಿದ್ಯಮಾನಗಳಿಗೆ ಈ ಪುಸ್ತಕ ಕನ್ನಡಿಯಾಗಬಲ್ಲದು. ೪. ಸಮಾಜಕ್ಕೆ ಹಿಡಿದ ಕನ್ನಡಿ : ಸೋಲನ್ನು ಸವಾಲಾಗಿ ಸ್ವೀಕರಿಸಿ ಹೋರಾಡುವದರ ಬಗೆಗೆ, ಗುರಿಯನ್ನು ಮುಟ್ಟುವದರ ಬಗೆಗೆ ಈ ಕೃತಿ ಆದರ್ಶಪ್ರಾಯ. ಓದುಗರಿಗೆ ಅನುಸರಿಸುವ ಹಂಬಲ, ಆತ್ಮವಿಶ್ವಾಸ ಮತ್ತು ಧೈರ್ಯ ತುಂಬುತ್ತದೆ. ಸಮಾಜದಲ್ಲ ನಡೆಯುವ ವಿದ್ಯಮಾನಗಳನ್ನು ಮುಲಾಜಿಲ್ಲದೆ ಚರ್ಚಿಸುವ ಧೈರ್ಯವನ್ನು ತೋರುತ್ತದೆ ಈ ಪುಸ್ತಕ. ೫. ಬರೆಯುವ ಶೈಲಿ ಮತ್ತು ಭಾಷೆ : ಉಪಯೋಗಿಸಿದ ಶಬ್ದಗಳು ಅತೀ ಸೂಕ್ತವಾದುವು. ಸಮಾನಾರ್ಥದ ಇಷ್ಟು ಸರಿಯಾದ ಇನ್ನೊಂದು ಪರ್ಯಾಯ ನುಡಿ ಇರಲಿಕ್ಕಿಲ್ಲ ಎನ್ನುವ ಭಾವನೆ ಬರುತ್ತದೆ. ಉದಾಹರಣೆಗೆ ಕೆಟ್ಟ ಸಂಬಂಧದ ಬಗೆಗೆ ಹೀಗೆ ಬರೆದಿದ್ದಾರೆ, ” ನನ್ನ ಅವನ ನಡುವೆ ಸಪ್ತಸಾಗರದ ಉಪ್ಪಿತ್ತು” ಅಂತ. ಎಷ್ಟೊಂದು ಆಳವಾದ ಅರ್ಥ. ಗಹನ ಅಧ್ಯಯನ, ಸಂಶೋಧನೆಗಳಿಂದ ಮಾತ್ರ ಇಂಥ ಕೃತಿ ರಚಿಸಲು ಸಾಧ್ಯ ಅಲ್ಲದೆ ಹೃದಯದ ಉಕ್ಕು ಭಾವನೆಗಳಲ್ಲಿ ಎದ್ದಿ ತೆಗೆದ ಭಾಷೆ ಉಪಯೋಗಿಸಿದಾಗ ಹೊರಬಂದ ಪುಸ್ತಕ ಯಾದ ವಶೇಮ್. ಬೆಂಗಳೂರಿನಲ್ಲಿ ಆಶ್ರಯ ಪಡೆದಿರುವ ಕಥಾನಾಯಕಿ ಕೊನೆಗೆ ಇಸ್ರೇಲದಲ್ಲಿ ತನ್ನ ಅಕ್ಕನನ್ನು ಹುಡುಕುವ ಪ್ರಯತ್ನದಲ್ಲಿ ಯಶ ಕಾಣುತ್ತಾಳೆ. ಆದರೆ ತಾಯಿ ಮತ್ತು ತಮ್ಮ ಹಿಟ್ಲರ್ ಸೃಷ್ಟಿಸಿದ ನರಕದಲ್ಲಿ ಅಂತ್ಯ ಕಂಡಿರುತ್ತಾರೆ. ಅವರು ಅನುಭವಿಸಿದ ನರಕಯಾತನೆಯಷ್ಟೇ ನಾಯಕಿಗೆ ಲಭ್ಯ. ಒಟ್ಟಿನಲ್ಲಿ ಕರುಳ ಕಲಕುವ ಇತಿಹಾಸ ಮಾನವ ನಿರ್ಮಿತ. ಅದು ಎಂದೂ ಭವಿಷ್ಯದಲ್ಲಿ ಪುನರಾವರ್ತನೆ ಆಗಬಾರದೆಂದು ಎಲ್ಲರ ಆಶಯ. ******* ವಿನುತಾ ಹಂಚಿನಮನಿ

ನಾ ಮೆಚ್ಚಿದ ಪುಸ್ತಕ Read Post »

ಪುಸ್ತಕ ಸಂಗಾತಿ

ನಾನು ಓದಿದ ಕಾದಂಬರಿ

ಮಲೆಗಳಲ್ಲಿ ಮದುಮಗಳು ಕುವೆಂಪು ಇದು ಬರಿ ಅನಿಸಿಕೆ ಅಷ್ಟೇ ವಿಮರ್ಶೆ ನನಗೆ ತಿಳಿಯದು. ನಾನು ಇತ್ತೀಚಿಗೆ ಓದಲ್ಪಟ್ಟ ಮತ್ತು ಮೊದಲ ಕಾದಂಬರಿ ಕನ್ನಡದ ಮನೆ ಮಾತಾಗಿರುವ, ಕನ್ನಡ ಸಾಹಿತ್ಯ ಲೋಕದಲ್ಲೇ ತನ್ನದೇ ಆದ ಛಾಪನ್ನು ಮೂಡಿಸಿರುವ ಅದ್ಬುತವಾದ, ಸುದೀರ್ಘವಾದ ಕಾದಂಬರಿ “ಮಲೆಗಳಲ್ಲಿ ಮದುಮಗಳು” ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ(ಕುವೆಂಪು) ರವರ ಕನಸಿನ ಕೂಸುಮಗಳು ಈ ಮಲೆಗಳಲ್ಲಿ ಮದುಮಗಳ ಓದಿದ ನಂತರ ನನ್ನ ಮನಸಲ್ಲಿ ಅಳಿಯದೆ ಉಳಿದ ವಿಷಯಗಳ ಬಗ್ಗೆ ಬರೆಯುತ್ತೇನೆ “ಮಲೆಗಳಲ್ಲಿ ಮದುಮಗಳು” ಸುದೀರ್ಘವಾದ, ಹೆಚ್ಚು ದೃಶ್ಯಗಳಿರುವ, ಹತ್ತಾರು ಮನೆತನಗಳು ನೂರಾರು ಕಥೆಗಳೇ ಒಳಗೊಳಗೇ ನೆಡೆದುಕೊಂಡಿರುವ ಕಾದಂಬರಿ ಇದು ಇನ್ನೂರು ವರ್ಷದ ಹಿಂದಿನ ಕಥೆಯಾದರು ಇಂದಿಗೂ ಕೂಡ ಪ್ರಸ್ತುತವೆನಿಸುವ ಘಟನೆಗಳು ಇಲ್ಲಿ ಬಂದು ಹೋಗುತ್ತದೆ. ಇಲ್ಲಿ ಯಾರೂ ಮುಖ್ಯರಲ್ಲ, ಯಾರು ಅಮುಖ್ಯರಲ್ಲ ಎಂದು ಮೊದಲೇ ಬರೆದಿರುವ ಕುವೆಂಪುರವರು ಇಲ್ಲಿನ ವಿಷಯ, ಘಟನೆ, ಸ್ಥಳ, ವ್ಯಕ್ತಿ, ವಿಶೇಷ ಯಾವುದು ಕೂಡ ಮುಖ್ಯವಲ್ಲ ಹಾಗೇ ಯಾವುದು ಕೂಡ ಮುಖ್ಯವಲ್ಲ ಎನ್ನುವಂತೆ ಬರೆದಿದ್ದಾರೆ. ಇಲ್ಲಿ ಯಾರೂ ಮುಖ್ಯರಲ್ಲ ಅಂದ್ರೆ ಹಣವಿರುವ ಯಜಮಾನರು ಹಳೆಮನೆ ಸುಬ್ಬಣ್ಣ ಹೆಗ್ಗಡೆಯಾಗಲಿ, ಸಿಂಭಾವಿ ಭರಮೈಹೆಗ್ಗಡೆ, ಬೆಟ್ಟಳ್ಳಿ ಕಲ್ಲಯ್ಯ ಗೌಡರಾಗಲಿ, ಹೂವಳ್ಳಿ ವೆಂಕಣ್ಣನಾಗಲಿ, ಕೋಣೂರು ಗೌಡರಾಗಲಿ ಹೀಗೆ ಅನೇಕ ದಣಿಗಳು ಪಾದ್ರಿ ಜೀವರತ್ನಯ್ಯರಾಗಲಿ ಯಾರು ಮುಖ್ಯರಲ್ಲ. ಹಾಗೆಯೇ ಇಲ್ಲಿ ಯಾರೂ ಅಮುಖ್ಯರಲ್ಲ ಹೊಲೆಯ ಸಿಂಭಾವಿ ನಾಯಿ ಗುತ್ತಿಯಾಗಲಿ, ಕೋಣೂರು ಐತ-ಪೀಂಚಲು, ಆ ಪುಡಿಸಾಬೀಗಳು, ಸೆರೆಗಾರ ಚಿಂಕ್ರ, ಅಕ್ಕಣಿ-ಪಿಜಿಣ, ತಿಮ್ಮಪ್ಪ ಹೆಗ್ಗಡೆ ಹೀಗೆ ಇನ್ನು ಹತ್ತಿಪ್ಪತ್ತು ಪಾತ್ರಗಳು ಅಮುಖ್ಯರಲ್ಲ. ಹಾಗೇ ಇಲ್ಲಿ ಯಾವುದು ಯಃಕಶ್ಚಿತವಲ್ಲ! ಗುತ್ತಿಯ ನಾಯಿ ಹುಲಿಯ ಆಗಲಿ, ಕಾವೇರಿ ದುರಂತಕ್ಕೆ ಕಾರಣವಾದ ಹಾಗೂ ಕಥೆಗೆ ಹಲವು ತಿರುವು ಕೊಡ ಉಂಗುರವಾಗಲಿ, ಚಿಂಕ್ರ ಬಿಟ್ಟು ಹೋದ ಲ್ಯಾಟಿನ್ ಆಗಲಿ, ಜೀವರತ್ನಯ್ಯ ಪರಿಚಯಿಸಿದ ಬೀಸೆಕಲ್ಲು(ಬೈಸಿಕಲ್) ಆಗಲಿ, ಹುಲಿಕಲ್ ನೆತ್ತಿ ಆಗಲಿ, ಹಾಗೇ ಕಾದಂಬರಿ ಅಲ್ಲಿ ಬರುವ ಸಣ್ಣ ಮಕ್ಕಳ ಪಾತ್ರವಾಗಲಿ ಯಾವುದು ಯಃಕಶ್ಚಿತವಲ್ಲ ಇಲ್ಲಿ ಎಲ್ಲಕ್ಕೂ ಇದೇ ಅರ್ಥ, ಯಾವುದು ಅಲ್ಲ ವ್ಯರ್ಥ ಅನ್ನೋ ಹಾಗೇ ಪ್ರತೀ ಸನ್ನಿವೇಶಗಳು ತಿಳಿಸುತ್ತಾ ಹೋಗುತ್ತೇ ಈ ಕಾದಂಬರಿ ಅಲ್ಲಿ ಹೇಳೋ ವಿಷಯಗಳು ಸಾಕಷ್ಟಿವೆ ಕುವೆಂಪುರವರೇ ಸಾಕಷ್ಟು ವಿಷಯಗಳನ್ನ ಬರೆದು ಒಂದು ದೊಡ್ಡ ಕಾದಂಬರಿ ಬರೆದು ಬಿಟ್ಟಿದ್ದಾರೆ, ಅದರಲ್ಲಿ ಇರುವ ಅಂಶಗಳನ್ನ ನನಗೆ ತೋಚಿದ ಹಾಗೆ ತಿಳಿಸುವೆ! ಕಾದಂಬರಿ ಅಲ್ಲಿ ನಾವು ಕಾಣದಿದ್ದ ಅದೆಷ್ಟೋ ಸಾಮಾಜಿಕ ಪಿಡುಗುಗಳು, ಮೂಢನಂಬಿಕೆಗಳು, ಜಾತಿವ್ಯವಸ್ಥೆ, ಧರ್ಮ ಪ್ರಚಾರ ಹಾಗೂ ಆ ಧರ್ಮ ಪ್ರಚಾರಕ್ಕೋಡ್ಡುವ ಆಮಿಷ, ಉಳ್ಳವರ ದರ್ಪ, ಹೆಣ್ಣಿನ ದೇಹದ ಮೇಲಿನ ಮೋಹಕ್ಕೆ ಏನೆಲ್ಲಾ ಮಾಡುತ್ತಾರೆ ಕೊಲೆ,ಅತ್ಯಾಚಾರ ಹೀಗೆ ಸಾಕಷ್ಟು ವಿಷಯಗಳ ಬಗ್ಗೆ ಚಿತ್ರಿತವಾಗುತ್ತ ಹೋಗುತ್ತೆ ಮಲೆನಾಡಿನಂತ ಆ ಕಾಡಿನ ಸುತ್ತಮುತ್ತಣದಲ್ಲಿ ಇದ್ದ ಗೌಡಿಕೆ ಯಜಮಾನಿಕೆ ಮೇಲೆ ಬೆಳಕು ಚೆಲ್ಲುತ್ತೆ, ತಮ್ಮ ಸ್ವಾರ್ಥಕ್ಕಾಗಿ ಹಾಗೂ ತಮ್ಮ ಮನೆತನದ ಗೌರವಕ್ಕಾಗಿ ಏನೂ ಬೇಕಾದರೂ ಮಾಡುವ ಅಂದಿನ ಕಾಲದ ದುಡ್ಡು ಇರುವರ ದರ್ಪ, ಗತ್ತು ಹಾಗೇ ಮೋಸದ ರೀತಿಯಲ್ಲಿ ಕಪಟವಾಗಿ ಆಸ್ತಿ ಸಂಪಾದನೆ ಮಾಡೋ ಮಂಜಯ್ಯ ಭಟ್ಟರಂತ ವ್ಯಕ್ತಿಗಳ ಪರಿಚಯ ಮಾಡುತ್ತೆ ಅಷ್ಟೇ ಅಲ್ಲದೆ ಅಂದಿನ ಕಾಲದಲ್ಲಿ ಇದ್ದ ಬ್ರಾಹ್ಮಣ, ಹೆಗ್ಗಡೆ , ಗೌಡ, ಹೊಲೆಯ-ಬಿಲ್ಲ-ನಾಯಕ-ಬೆಸ್ತ ಹೀಗೆ ಇನ್ನೂ ಅನೇಕ ಜಾತಿವ್ಯವಸ್ಥೆ ಬಗ್ಗೆ ತಿಳಿಸಿದರೆ, ಮೇಲಿನ ವರ್ಗದವರು ಕೆಳಗಿನ ವರ್ಗದವರನ್ನ ಓದು ಬರದ ಜನರನ್ನ ಹೇಗೆಲ್ಲಾ ಅನ್ಯಾಯ, ಶೋಷಣೆ ಹಾಗೂ ತಾರತಮ್ಯ ಮಾಡ್ತಾ ಇದ್ರು ಅನ್ನೋದರ ಬಗ್ಗೆ ಆಗಲೇ ತಿಳಿಸಿದ್ದಾರೆ. ಉಳ್ಳವರು, ದುಡ್ಡಿರುವರು ಮಾಡಿದ್ದು ಏನೇ ಮಾಡಿದರೂ ಸರಿ ತಮ್ಮ ಜೀತದಾಳುಗಳು ಮಾಡೋದು ತಪ್ಪು ಅನ್ನೋ ಸಿದ್ಧಾಂತ ಎದ್ದು ಕಾಣುತ್ತೆ….. ಮಲೆಗಳಲ್ಲಿ ಮದುಮಗಳು ಹೆಚ್ಚು ಪ್ರೇಮಕಥೆಯನ್ನ ಹೊಂದಿರುವ ಒಂದು ಸುಂದರ ಕಾದಂಬರಿ ಓದುತ್ತಿದ್ದರೆ ಮಜಾ ಕೊಡೋ ಪ್ರೇಮ ಕಥನ ಅಂದ್ರೆ ಗುತ್ತಿ-ತಿಮ್ಮಿ, ಐತಾ-ಪೀಂಚಲು, ಹಾಗೆಯೇ ಮಲೆನಾಡಿನ ದೊಡ್ಡವರ ಪ್ರೇಮಕಥೆ ಮುಕುಂದಯ್ಯ-ಚೆನ್ನಮ್ಮ ಪ್ರೇಮಕಥೆ ಇದರಲ್ಲಿ ಸಾಹಸಮಯ ಪ್ರೇಮಕಥನ ಅಂದ್ರೆ ಗುತ್ತಿ ಮತ್ತು ತಿಮ್ಮಿಯರದ್ದು ಹೊಲೆಯರಾದ ಗುತ್ತಿ ತನ್ನ ಅತ್ತೆಯ ಮಗಳನ್ನ ಪ್ರೇಮಿಸಿ ಅವಳನ್ನ ಸಂಧಿಸಿ, ಅಪಹರಿಸಿ ಹೇಗೋ ಮದುವೆಯಾಗಿ ಮತ್ತೇ ತನ್ನ ಹೆಂಡತಿಯಿಂದ ದೂರ ಆಗಿ ಈ ಗೌಡರ, ಪೊಲೀಸರ ಹೆದರಿಕೆಯ ಮದ್ಯೆ ಊರನ್ನೇ ಬಿಟ್ಟು ದೇಶಾಂತರ ಹೋಗುವ ಇವನ ಜೀವನದ ಬದುಕು ಅಷ್ಟೇ ಸಾಹಸವು ಸ್ವಾರಸ್ಯಕರವು ಹೌದು ಇಲ್ಲಿ ಗುತ್ತಿಯ ಮನೋಬಲ ಹಾಗೇ ಅವರ ನಿಜವಾದ ಪ್ರೇಮ ಬದುಕನ್ನ ಎಲ್ಲೆಲ್ಲೋ ಕರೆದುಕ್ಕೊಂಡು ಹೋಗಿ ಎಲ್ಲ ಸವಾಲುಗಳನ್ನು ಎದುರಿಸುವ ಇವರ ಜೋಡಿ ಕೊನೆಗೆ ಒಂದಾಗಿ ತಮ್ಮ ಬದುಕಿಗಾಗಿ ಊರನ್ನೇ ಬಿಡುವ ಹಾಗೇ ಆಗುತ್ತೆ ಇನ್ನಾ ಐತಾ ಮತ್ತು ಪೀಂಚಲು ದಂಪತಿಯ ಪ್ರೇಮಕಥೆ ಗಂಡ-ಹೆಂಡತಿಯ ಇರಬೇಕಾದ ಮುಗ್ದತೆ, ಸರಸ-ವಿರಸ ಓದುಗುರನ್ನ ಸೆಳೆಯುತ್ತೆ, ಗಂಡನ ಅನುಮಾನ ಮುನಿದ ಗಂಡನನ್ನ ಸಮಾಜಯಿಸುವ ಹೆಂಡತಿಯ ಜಾಣತನ ಇವರಿಬ್ಬರ ಜೋಡಿಯಲ್ಲಿ ಚೆನ್ನಾಗಿ ಮೂಡಿ ಬಂದಿದೆ ಹಾಗೆಯೇ ಸ್ವಾಮಿ ಭಕ್ತಿ ಕೂಡ ಈ ದಂಪತಿ ಪಾತ್ರದಲ್ಲಿ ಕಂಡು ಬರುತ್ತೆ ಇನ್ನಾ ಮುಕುಂದಯ್ಯ-ಚೆನ್ನಮ್ಮ ಪ್ರೇಮಕಥೆ ಇಲ್ಲಿ ಹೆಣ್ಣಿನ ದಿಟ್ಟತನ ಹಾಗೂ ಗಂಡು ತನ್ನ ಪ್ರೇಮವನ್ನ ಉಳಿಸಿಕೊಳ್ಳಲು ಮಾಡಬೇಕಾದ ಸಾಹಸ ಎಲ್ಲಾ ಸಮ್ಮಿಳಿತವಾಗಿದೆ, ಚಿಕ್ಕಂದಿನಿಂದ ಇರೋ ಪ್ರೇಮಕಥೆ ಅದೂ ಇಲ್ಲದೆ ಹಿಂದಿನ ಜನುಮದ ನಂಟು ಇರೋ ಜೋಡಿ (ಏಳೇಳು ಜನ್ಮದ ನಂಟು) ಪ್ರೀತಿ ಅಜ್ಜಿಯನ್ನ ಮನೆಯವರನ್ನ ಬಿಟ್ಟು ಬರೋ ಚಿನ್ನಕ್ಕ ಕಾಡಿನ ದಾರಿಯಲ್ಲಿ ನಡೆದು ಹುಲಿಕಲ್ ನೆತ್ತಿ ಹತ್ತಿ ತನ್ನ ಭಾವನ ಕೈ ಹಿಡಿಯುವ ಆಸೆ ತನ್ನವರ ಬಿಟ್ಟು ಬಂದೇ ಅನ್ನೋ ಹೆಣ್ಣಿನ ಸಹಜ ನೋವು ಚೆನ್ನಮ್ಮನ ಪಾತ್ರದಲ್ಲಿ ಅನಾವರಣ ಆಗುತ್ತೆ, ತಾನು ಪ್ರೀತಿಸಿದ ಹುಡುಗಿಯ ಕೈ ಹಿಡಿಯಲು ಎದುರಾಗುವ ಸವಾಲುಗಳನ್ನು ಎದುರಿಸಲು ಏನೇನೋ ತಂತ್ರ, ಸಾಹಸ ಮಾಡಿ ಮುಕುಂದಯ್ಯ ಕೊನೆಗೆ ತಾನು ಬಯಸಿದ್ದನ್ನೇ ದಕ್ಕಿಸಿಕೊಳ್ಳುವ ಅವನ ದೃಢ ಸಂಕಲ್ಪ ಇಷ್ಟ ಆಗುತ್ತೆ ಮನುಷ್ಯ-ಮನುಷ್ಯರ ನಡುವಿನ ಪ್ರೀತಿ ಅಷ್ಟೇ ಅಲ್ಲದೆ ಮನುಷ್ಯ ಮತ್ತು ಪ್ರಾಣಿ ನಡುವಿನ ಸಂಬಂಧ, ಪ್ರೀತಿ ತ್ಯಾಗ ಗುತ್ತಿ ಮತ್ತು ಹುಲಿಯ(ನಾಯಿ) ಓದುಗರನ್ನ ಕಾಡುತ್ತೆ ಕಾಮದಿಂದ ಆಚೆಗೆ ಪ್ರೀತಿಯನ್ನ ಗೆಲ್ಲುವ ಸನ್ನಿವೇಶಗಳು ಒಂದು ಕಡೆ ಆಗರೆ ಆ ಕಾಮದಾಸೆಗೆ ಬಲಿ ಆಗೋ ಕಾವೇರಿಯ ದುರಂತ ಕಥೆ ಇನ್ನೊಂದು ಕಡೆ, ಕಾವೇರಿಯ ಮೇಲೆ ನಡೆಯುವ ಅತ್ಯಾಚಾರ ಇತ್ತೀಚಿನ ದೇಶದ ಪರಿಸ್ಥಿತಿ ಹಿಡಿದ ಕೈಗನ್ನಡಿ ಅನ್ನೋ ಹಾಗೇ ಇದೆ ಅಂದಿನ ಆ ಕಾವೇರಿಯ ಕಣ್ಣೀರಿನ ಕಥೆ…. ಈಗಲೂ ಕೂಡ ಅಂತಹ ದುಷ್ಟ ಚಿಂಕ್ರ-ಸಾಬೀಗಳ ಜನರು ನಮ್ಮ ನಡುವೆ ಇಬ್ಬರೇ ಅನ್ನೋದೇ ಶೋಚನೀಯ….! ಇನ್ನೂ ನಾಗಕ್ಕನ ಪಾತ್ರ ಸ್ವಲ್ಪ ಹತ್ತಿರ ಆಯ್ತು ಯಾಕಂದ್ರೆ ತನ್ನದು ಏನೇ ದುರಂತ ಕಥೆ ಇದ್ರೂ ತನ್ನ ಬದುಕೇ ಮುಳ್ಳಿನ ಮೇಲಿನ ನಡೆಯಾಗಿದ್ರು ಇನ್ನೊಬ್ಬರ ಅಂದ್ರೆ ಚಿನ್ನಮ್ಮನ ನಲಿವಿನಲ್ಲೇ ತನ್ನ ನೋವ ಮರೆತು ಅವಳಿಗಾಗಿ ಪಡಿಸೋ ಅವಳ ಮನಸುಇಷ್ಟ ಆಗುತ್ತೆ ಈ ಕಾದಂಬರಿ ಒಳಗೆ ನೋವು-ನಲಿವು, ಮದುವೆ-ಸಾವು, ಪ್ರೀತಿ-ಫಜೀತಿ, ಹಣ-ದರ್ಪ-ಅಧಿಕಾರ-ಮೋಹ, ಆಶ್ಚರ್ಯ-ಭವಿಷ್ಯ-ಶಿಕ್ಷಣ ಹೀಗೆ ಅನೇಕ ಮಜಲುಗಳಿಂದ ಕೂಡಿದೆ……. ಯಾವುದು ಮುಖ್ಯ ಅಲ್ಲ, ಅಮುಖ್ಯ ಅಲ್ಲ ಅನ್ನೋ ಹಾಗೆ ಎಷ್ಟೋ ವಿಷಯಗಳಿವೆ ಹೇಳಲು ಆದರೂ ನನಗೆ ಓದಿದ ಅನುಭವ ನನ್ನ ಗ್ರಹಿಕೆಯೇ ಬಂದ ಅಂಶಗಳು ಇದರಲ್ಲಿವೆ ಧನ್ಯವಾದಗಳು ಸಂಗಾತಿ ಪತ್ರಿಕೆಗೆ ಮತ್ತು ಸಂಪಾದಕರಿಗೆ ನಾನು ಓದಿದ್ದನ್ನ ನೆನೆದು ಬರೆಯಲು ಅವಕಾಶ ಮಾಡಿಕೊಟ್ಟಿದ್ದಕ್ಕೆ….. ******************** ಮದನ್ ಕುಮಾರ್

ನಾನು ಓದಿದ ಕಾದಂಬರಿ Read Post »

ಕಾವ್ಯಯಾನ

ಕಾವ್ಯಯಾನ

ಕನಸಿನೂರಿನ ಅಪ್ಪ ಐಶ್ವರ್ಯ ಎಲ್.. ಬೆಳಕ ಹೊತ್ತು ಬಂದ ಸೂರ್ಯನೂ ಹೋಗುವ ಹೊತ್ತಾಯಿತು ಹೊರಗೆ ಹೋದ ಅಪ್ಪನು ಬಂದಾನೂ, ಕೈ ತುಂಬ ಬೊಂಬೆ ತಿಂಡಿಗಳ ತಂದಾನೂ ಅವರಿವರ ಮನೆಯ ಅಪ್ಪಂದಿರಂತೆಯೇ ನನ್ನಪ್ಪನೆಂದು ಕಣ್ಣಳತೆಗೆ ಎಟುಕುವವರೆಗೂ ಮನೆಯ ಮುಂದಿನ ಕಂಬವನೇರಿ ಕಾದು ಕುಳಿತೆ, ಬೆಳೆದು ಬುದ್ದಿಬರುವವರೆಗೆ…… ಏರಿದ ಕಂಬಕ್ಕಾದರೂ ಅರಿವಾಗಿರಬಹುದು ಅಪ್ಪನೆಂಬ ಕನಸು ಬೇರೂರಿದ್ದು ನನ್ನೊಳಗೆ, ಅರಿವಾಗಲೇ ಇಲ್ಲ ದೇವರಿಗೆ, ಅಪ್ಪನ ಕರೆದೊಯ್ದೆಬಿಟ್ಟಿದ್ದನು ನಂಗೆ ಬುದ್ದಿಬರುವುದರೊಳಗೆ………. ಜಡಕು ಕೂದಲಿಗೆ ಜುಟ್ಟುಕಟ್ಟಿ, ಕಪ್ಪು ಕಾಡಿಗೆಯಲಿ ಕಾಸಗಲದ ಬೊಟ್ಟಿಟ್ಟು ನನ್ನಿಷ್ಟದ ಫ್ರಾಕನ್ನೆ ತೊಟ್ಟು, ಕುಣಿವಾಗ ಕೆನ್ನೆಯ ತುಂಬೆಲ್ಲಾ ಮುತ್ತಿಟ್ಟು ಅಮ್ಮನಿಗೂ ಕದ್ದು ಮುಚ್ಚಿ ಚಾಕಲೇಟ್ ಕೊಟ್ಟು, ಭುಜದ ಮೇಲೆ ನನ್ನ ಹೊತ್ತು ಎಲ್ಲರಂತೆ ನನ್ನನ್ನೂ ಶಾಲೆಗೆ ಹೊತ್ತೊಯ್ಯುವುದು ಬಾಕಿ ಇತ್ತು ಅಪ್ಪನಿಗೆ ಅದ್ಯಾವ ಕೆಲಸ ಬಾಕಿ ಇತ್ತೊ ನಾಕಾಣೆ ಅಪ್ಪನ ಕಾಯುವಿಕೆಯಲಿ ಏರಿದ ಕಂಬ, ಇಳಿದ ನನ್ನ ಕಣ್ಣೀರಿನಲಿ ಹಸಿರಾಯ್ತು ಇಂದಲ್ಲ ನಾಳೆ ಅಪ್ಪ ಬಂದೇ ಬರುವನೆಂಬ ನಂಬಿಕೆ ಮಾತ್ರ ಹುಸಿಯಾಯ್ತು…… ಪುಟ್ಟ ಹೆಜ್ಜೆ ಇಟ್ಟಾಗ ಅಂಗಾಲಿಗೆ ಮುತ್ತಿಕ್ಕಿ, ಬೊಗಸೆಯಲಿ ಪಾದ ಹಿಡಿದು, ಅಮ್ಮ ಗದರಿದಾಗ ಅಮ್ಮನಿಗೇನೆ ಗದರಿಸಿ ನಿನ್ನ ಎದೆಗಪ್ಪಿ ನಾ ಮಲಗಿದಾಗ ಸುರಿದ ಜೊಲ್ಲು ಒರೆಸಿ ಉಪ್ಪು ಮೂಟೆಯ ಮಾಡಿ, ಊರೆಲ್ಲ ತಿರುಗಿಸಿ, ಮುದ್ದಿಸಿ ಕೈಬೆರಳ ಹಿಡಿದು ನಡೆಸುವುದರಿಂದ ಹಿಡಿದು ಕಾಲಿಗೆ ಕಾಲುಂಗುರ ಹಾಕಿಸಿಕೊಳ್ಳುವವರೆಗೂ ನೀ ಜೊತೆಗಿರಬೇಕಿತ್ತೆಂಬ ಆಸೆ ಇಂದಿಗೂ ಬದುಕಿದೆ ಆದರೇನೂ ಮಾಡುವುದು ಬಯಕೆ ಇಡೆರಿಸಲು ನೀನೆ ಬದುಕಿಲ್ಲ ……… ನೀ ಪ್ರಪಂಚಕ್ಕೆ ತಂದ ಪುಟ್ಟ ಜೀವವೇ ನಿನಗೆ ಪ್ರಪಂಚವೆಂದು ಪ್ರತಿ ಹೆಜ್ಜೆಯಲು ಮಗಳ ಮುಂದಿನ ಭವಿಷ್ಯಕ್ಕೆಂದು ರಾಣಿಯಂತೆ ಬೆಳೆದ ಮಗಳಿಗೆ, ರಾಜಕುಮಾರನ ತಂದು ಮದುವೆ ಮಾಡುವ ಕನಸ ಕಂಡು, ಮಗಳು, ಅಳಿಯ ಮೊಮ್ಮಕ್ಕಳೆಂದು ಅಜ್ಜನಾಗುವವರೆಗೂ ನೀನಿರಬೇಕಿತ್ತು ಅಪ್ಪ…… ನಾನೂ ದೊಡ್ಡವಳಾಗಿದ್ದೇನೆ, ನಿನ್ನಷ್ಟೇ ಎತ್ತರಕ್ಕೆ ಬೆಳೆದು ನೀನಿರಬೇಕಿತ್ತೆಂಬ ಬಯಕೆಯು ನನ್ನಷ್ಟೆತ್ತರಕೆ ಬೆಳೆದಿದೆ ನನ್ನೊಟ್ಟಿಗೆ ಕಾದು ಆದರೂ….. ಅಪ್ಪ ನೀನಿರಬೇಕಿತ್ತು ನನ್ನೊಟ್ಟಿಗೆ…… ಅಜ್ಜನಾಗಿ ನನ್ನಂಥವಳನ್ನೆ ಹೆಗಲ ಮೇಲೆ ಹೊರುವವರೆಗೆ….. **********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಜರೂರು ಬಂದೊದಗಿದೆ ಗೌರಿ.ಚಂದ್ರಕೇಸರಿ ದೇವ ಮಾನವರೆಲ್ಲ ಏನಾದರು? ತಪದಲ್ಲಿರುವರಾ ಇಲ್ಲಾ ಮೌನ ವ್ರತದಲ್ಲಿರುವರಾ? ಇಲ್ಲಾ ನಿದ್ರೆಯಲ್ಲಿ ಕಳೆದು ಹೋದರಾ? ಸೂರ್ಯ ಚಂದ್ರರುದಿಸುವುದು ತಮ್ಮಿಂದ ಎಂದವರು ಸ್ಪರ್ಷ ಮಾತ್ರದಿಂದಲೇ ಕಾಯಿಲೆಗಳ ಮಾಯ ಮಾಡುವೆ ಎಂದವರು ಅಂಗೈ ನೋಡಿ ತಾಳೆ ಹಾಕುವವರು ಪೂಜೆಗೈದು ಪಾಪವ ತೊಳೆಯುವವರು ಏನಾದರು? ಕೂಗು ಕೇಳುತ್ತಿಲ್ಲವೆ ಹಾಹಾಕಾರ ಕಾಣುತ್ತಿಲ್ಲವೆ? ಭೂ ಮಂಡಲವನ್ನೇ ಆವರಿಸಿದೆ ಅನಿಷ್ಠ ಎಲ್ಲೆಲ್ಲೂ ಹಿಡಿ ಅನ್ನಕ್ಕಾಗಿ ಚಾಚಿವೆ ಕೈಗಳು ಕುಣಿಕೆ ಹಿಡಿದು ಕಾದಿದೆ ಸಾವು ಬನ್ನಿ ನಿಮ್ಮ ಜರೂರು ಈಗ ಬಂದೊದಗಿದೆ ಹೊತ್ತಿರುವ ಬೆಂಕಿಗೆ ನಿಮ್ಮ ಪ್ರಭಾವಳಿಯ ತಂಪನೆರೆಯಿರಿ ವಿಶ್ವದ ವಿಷವನೆಲ್ಲ ಹೀರಿ ಬಿಡಲಿ ನಿಮ್ಮ ಮಂತ್ರ ದಂಡ ******

ಕಾವ್ಯಯಾನ Read Post »

You cannot copy content of this page

Scroll to Top