ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಪುಸ್ತಕ ಸಂಗಾತಿ

ನಾನು ಓದಿದ ಕಾದಂಬರಿ

ತುಂಗಭದ್ರ ಶ್ರೀಮತಿ ಎಂ.ಕೆ.ಇಂದಿರಾ ಮನುಷ್ಯನಿಗೆ ಯಾವ ದುಃಖವೂ ಶಾಶ್ವತವಲ್ಲ! ಆಘಾತ ಸಿಡಿಲಿನಂತೆರಗಿದಾಗ ಅದನ್ನ ತಡೆದುಕೊಳ್ಳುವ ಶಕ್ತಿ ಒಬ್ಬೊಬ್ಬರಿಗೆ ಒಂದೊಂದು ರೀತಿ! ಅದು ಪ್ರತಿಯೊಬ್ಬರಿಗೂ ಅವರ ಮನೋಬಲದ ಮೇಲೆ ಅವಲಂಬಿತವಾಗಿರುತ್ತೆ! ಅದೇ ರೀತಿ ಸುಖವನ್ನ ಕೂಡ ಸ್ವೀಕರಿಸೋದು ಅಷ್ಟು ಸುಲಭವಲ್ಲ. ಎಲ್ಲವೂ ಮನೋಭಿಲಾಷೆಯಂತೆಯೇ ಇಡೇರಿ ಸಕಲ ಸಿರಿ ಸಂಪತ್ತು ದೊರೆತಾಗ ಸ್ಥಿತಪ್ರಜ್ಞೆಯಿಂದ ಸ್ವೀಕರಿಸೋದು, ಚಿತ್ತ ತಣ್ಣಗಿರಿಸೋದು ಅಷ್ಟು ಸುಲಭವಲ್ಲ! ಕಷ್ಟ ಬಂದಾಗ, ಪ್ರಕೃತಿ ವೈಪರಿತ್ಯಗಳಿಂದಾಗಿ ಜೀವನವೇ ಡೋಲಾಯಮಾನವಾದಾಗ ಅದನ್ನ ಸ್ವೀಕರಿಸುವುದು ಹೇಳಿದಷ್ಟು ಸುಲಭವಂತೂ ಅಲ್ಲ! ಆದರೆ ಜರುಗುವ ಕೆಲ ಘಟನೆಗಳಿಗೆ ಮನಸ್ಸು ತೆರೆದುಕೊಂಡರೆ ಮತ್ತೆ ಜೀವನ ಹಸನಾಗಬಹುದು. ಕವಿದ ಕಾರ್ಮೋಡಗಳು ಸರಿದು ಶುಭ್ರ ನಿಲಾಗಸದಂತಾಗಬಹುದು ಜೀವನ. ಕಷ್ಟಕಾಲದಲ್ಲಿ ರವಷ್ಟು ಸಹನೆಯೇ ದೊಡ್ಡ ಕುತ್ತಿನಿಂದ ಪಾರುಮಾಡಬಹುದು. ಹಾಗೆಯೇ ಪ್ರೀತಿಸುವ ಸ್ನೇಹಿತರು – ಕುಟುಂಬವಿದ್ದರೆ ಎಂತಹುದೇ ಕಷ್ಟದ ಸಮಯದಲ್ಲೂ ಜೀವ ಉಳಿದು, ಅದು ಪುನರ್ಜನ್ಮವಾದೀತು! ಇದಷ್ಟು ಅನಿಸಿದ್ದು, ೧೯೬೩ರಲ್ಲೇ ಬರೆದ ಪುಸ್ತಕ “ತುಂಗಭದ್ರ”, ಕನ್ನಡದ ಖ್ಯಾತ ಲೇಖಕಿ ಶ್ರೀಮತಿ ಎಂ.ಕೆ.ಇಂದಿರಾ ಅವರ ಮೊದಲ ಕಾದಂಬರಿಯನ್ನ ಓದಿದಾಗ! ಅಚನಕ್ಕಾಗಿ ಈ ಕಾದಂಬರಿ ಹಿಂದಿನ ಕಥೆಯನ್ನ ಯಾವುದೋ ಜಾಲತಾಣದಲ್ಲಿ ಓದಿದಾಗ ರೋಮಾಂಚನವೆನಿಸಿತು! ಪ್ರಕಾಶಕರು ಹಸ್ತಪ್ರತಿಯನ್ನು ಇಟ್ಪ ಬ್ಯಾಗು ಮುಂಬಯಿಯ ಮಾಯಾನಗರಿಯಲ್ಲಿ ಕಳೆದು ಬಹಳಷ್ಟು ಹಳಹಳಿಸುವಂತಾದಾಗ, ಬೇರೆ ಯಾವುದೇ ರೀತಿಯ ಪ್ರತಿಗಳು ಇಲ್ಲದೆ, ಪ್ರತಿ ಮಾಡಲೂ ಯಾವುದೇ ಅನುಕೂಲವಿಲ್ಲದಂತಹ ಕಾಲಘಟ್ಟದಲ್ಲಿ ಇಂದಿರಾರವರು ಎದೆಗುಂದದೆ ಕೇವಲ 15 ದಿನಗಳಲ್ಲಿ ಪುನಃ ಸಂಪೂರ್ಣ ಕಾದಂಬರಿಯನ್ನ ಬರೆದು ಕೊಡುತ್ತಾರೆ. ಪ್ರಕಟಣೆಯಾಗುತ್ತಿದ್ದಂತೆ ಅಪಾರ ಮೆಚ್ಚುಗೆ ಪಡೆಯುತ್ತೆ. ತಕ್ಷಣವೇ ತಡ ಮಾಡದೆ ಅಮೇಜಾನ್ ನಲ್ಲಿ ಖರೀದಿಸಿ ಒಂದೇ ಏಟಿಗೆ ಇಡೀ ರಾತ್ರಿ ಓದಿ ಮುಗಿಸಿದೆ! ಕೃಷ್ಣ ವೇಣಿ, ಮುದ್ದುರಾಮ, ರಾಘು, ತುಂಗಾ-ಭದ್ರ ರೆಂಬ ಹುಟ್ಟು ಕುರುಡು ಅವಳಿಗಳು, ಶಂಭು, ಭಾಗಮ್ಮ, ಮಂದಾ, ದುಗ್ಗಾಭಟ್ಟರು, ನಾಗಾಭಟ್ಟರು, ಮೂಕಮ್ಮ, ಮಧುರಾ, ಶೇಷಾಚಾರರು, ತುಳಸಿ, ರಾಘುವಿನ ಅತ್ತೆ.. ಹೀಗೇ ಎಲ್ಲಾ ಪಾತ್ರಗಳೂ ಮನದಲ್ಲಿ ಅಚ್ಚಳಿಯದಂತಿವೆ!… ಸಂಬಂಧಗಳು, ಪ್ರೀತಿ ಇವೆಲ್ಲವೂ ಜೀವನದಲ್ಲಿ ಎಲ್ಲಕ್ಕಿಂತ ಮಿಗಿಲು! ನಾಗಾಲೋಟದಲ್ಲೋಡುವ ಕಾಲಘಟ್ಟದಲ್ಲಿರುವ ನಮಗೆ ಈ ಕಾದಂಬರಿ ಓದಿದಾಗ ಇವರಿಗೆಲ್ಲ ಜೀವನವನ್ನ ನಿಧಾನಗತಿಯಲ್ಲಿ ಅನುಭವಿಸೋ ತಾಳ್ಮೆ ಅದೆಷ್ಟಿದ್ದೀತು ಅನ್ನಿಸದಿರಲಾರದು! 60ರ ದಶಕದಲ್ಲಿ ಬರೆದ ಕಾದಂಬರಿ. ಓದಿಸಿಕೊಂಡು ಹೋಗುತ್ತೆಯೇ ಅನ್ನುವುದೇ ನನ್ನ ಅನುಮಾನವಾಗಿತ್ತು. ಅದರೆ ಆದು ಯಾವ ಕಾಲಘಟ್ಟದಲ್ಲಿಯಾದರೂ ಓದಿಸಿಕೊಳ್ಳುವಂತಹದು ಎಂದು ಓದಿ ಮುಗಿಸುವಾಗ ಕಣ್ಣಂಚಿನ ತೇವ ಸಾಬೀತು ಪಡಿಸಿತು! ಹೆಣ್ಣಿಗೆ ಶಿಕ್ಷಣದ ಅಗತ್ಯವೇ ಇಲ್ಲವೆಂದುಕೊಂಡಿದ್ದ ಕಾಲಮಾನದಲ್ಲಿ, ಮಲೆನಾಡಿನ ಹಳ್ಳಿಗಾಡಿನ ಜೀವನ, ಅಲ್ಲಿನ ಪರಿಸರ, ಹೆಣ್ಣು-ಗಂಡಿನ ತುಮುಲಗಳು, ಆಗಿನ ಮೂಢತೆ ಮತ್ತು ಪ್ರಕೃತಿಯ ಚೆಲುವು ಕಣ್ಣಿಗೆ ಕಟ್ಪುವಂತೆ ಬರೆದಿದ್ದಾರೆ ಶ್ರೀಮತಿ ಇಂದಿರಾರವರು. ಖಂಡಿತವಾಗಿಯೂ ಓದಲೇಬೇಕಾದಂತಹ ಕಾದಂಬರಿ! “ಓಲ್ಡ್ ಇಸ್ ಗೋಲ್ಡ್” ಅನ್ನುವಂತಹ ಕೃತಿಯಿದು! ***************************** ಚೈತ್ರಾ ಶಿವಯೋಗಿಮಠ

ನಾನು ಓದಿದ ಕಾದಂಬರಿ Read Post »

ಇತರೆ

ಭಯವೇ ಅಪಾಯಕಾರಿ

ಕೊರೋನಾ ಮತ್ತು ಭಯ ಗಣೇಶಭಟ್,ಶಿರಸಿ ಕೊರೊನಾಕ್ಕಿಂತ ಅದರ ಕುರಿತಾದ ಭಯವೇ ಅಪಾಯಕಾರಿ ಕೊರೊನಾ ವೈರಸ್ ಸೋಂಕಿನ ಅಪಾಯದಿಂದ ಪಾರಾಗುವ ಅತ್ಯುತ್ತಮ ವಿಧಾನವೆಂದರೆ ಮನುಷ್ಯರಲ್ಲಿ ರೋಗ ನಿರೋಧಕ ಶಕ್ತಿ ಬೆಳೆಸುವುದು. ಅನಾರೋಗ್ಯದಿಂದ ಬಳಲುತ್ತಿರುವವರು ಈ ಸೋಂಕಿಗೆ ಬಹುಬೇಗ ಬಲಿಯಾಗುತ್ತಾರೆ. ಕೊರೊನಾದಿಂದಾಗಿ ಮೃತಪಟ್ಟವರಲ್ಲಿ ಹೆಚ್ಚಿನವರಿಗೆ ಒಂದಿಲ್ಲೊಂದು ವಿಧದ ಅನಾರೋಗ್ಯ ಇದ್ದುದು ಕಂಡು ಬಂದಿದೆ ಹಾಗೂ ಅವರಲ್ಲಿ ಹೆಚ್ಚಿನವರು ಅರವತ್ತಕ್ಕಿಂತ ಹೆಚ್ಚಿನ ವಯಸ್ಸಾದವರು. ರೋಗನಿರೋಧಕ ಶಕ್ತಿಯನ್ನು ಬೆಳೆಸಿಕೊಳ್ಳಲು ಪೌಷ್ಠಿಕ ಆಹಾರ, ವ್ಯಾಯಾಮ, ಕಾಲಕಾಲಕ್ಕೆ ನೀರು ಸೇವನೆ, ಒಳ್ಳೆಯ ನಿದ್ದೆ ಹಾಗೂ ಎಲ್ಲಕ್ಕಿಂತ ಹೆಚ್ಚಾಗಿ ಒತ್ತಡರಹಿತವಾಗಿರಬೇಕು. ಸಸ್ಯಾಹಾರಿಗಳಲ್ಲಿ ಮಾಂಸಾಹಾರಿಗಳಿಗಿಂತ ರೋಗ ನಿರೋಧಕ ಶಕ್ತಿ ಹೆಚ್ಚಾಗಿರುತ್ತದೆಂದು ವೈದ್ಯ ವಿಜ್ಞಾನ ಹೇಳುತ್ತದೆ. ಭಯ, ಆತಂಕಗಳಿಂದ ಬಳಲುತ್ತಿರುವ ಆರೋಗ್ಯವಂತ ವ್ಯಕ್ತಿಯ ದೇಹದಲ್ಲಿ ವಿವಿಧ ಗ್ರಂಥಿರಸ ( ಹಾರ್ಮೋನ್) ಗಳ ಸ್ರವಿಸುವಿಕೆಯ ಪ್ರಮಾಣ ಹೆಚ್ಚುತ್ತದೆ. ಇದರಿಂದಾಗಿ ಜೀರ್ಣಾಂಗ ವ್ಯವಸ್ಥೆಯ ಮೇಲೂ ನಕಾರಾತ್ಮಕ ಪರಿಣಾಮ ಉಂಟಾಗುತ್ತದೆ. ಉದ್ದಿಗ್ನತೆಯಿಂದಾಗಿ ಉಸಿರಾಟದ ವೇಗ ಹೆಚ್ಚಿ ಆಳವಾದ ಶ್ವಾಸೋಚ್ಛಾಸ ಕ್ರಿಯೆ ನಡೆಯದೇ ಪುಪ್ಪುಸದಲ್ಲಿ ತುಂಬಿಕೊಂಡ ಮಲಿನ ವಾಯು ಹೊರಹೋಗದೇ ಅಲ್ಲಿಯೇ ಉಳಿದು ವಿವಿಧ ಸೋಂಕುಗಳಿಗೆ ಅವಕಾಶ ಮಾಡಿಕೊಡುತ್ತದೆ. ಆಹಾರಕ್ಕಾಗಿ ಕೊಲ್ಲಲ್ಪಡುವಾಗ ಪ್ರಾಣಿಗೆ ಆಗುವ ಆತಂಕ, ಭಯಗಳಿಂದ ಅದರ ದೇಹದಲ್ಲಾಗುವ ರಾಸಾಯನಿಕ ಬದಲಾವಣೆಯೇ ಮಾಂಸಾಹಾರಿಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುವ ಪ್ರಮುಖ ಕಾರಣಗಳಲ್ಲಿ ಒಂದು. ಅದರ ದೇಹದಲ್ಲಿ ಕೂಡಾ ವಿವಿಧ ಗ್ರಂಥಿರಸ ಹಾಗೂ ರಾಸಾಯನಿಕಗಳ ಸ್ರವಿಸುವಿಕೆಯಾಗಿ ಅವು ರಕ್ತ ಮತ್ತು ಮಾಂಸದಲ್ಲಿ ಸೇರಿಕೊಳ್ಳುತ್ತವೆ. ಮನುಷ್ಯ ಇಂತಹ ಮಾಂಸವನ್ನು ತಿಂದಾಗ ಈ ರಾಸಾಯನಿಕಗಳು ಅವನ ದೇಹವನ್ನು ಸೇರಿ ರೋಗನಿರೋಧಕ ಶಕ್ತಿಯನ್ನು ಕುಂದಿಸುತ್ತವೆ. ಹಲ್ಲಿನ ರಚನೆ, ಬಾಯಿಯ ಲಾಲಾರಸ, ಜಠರದಲ್ಲಿ ಸ್ರವಿಸುವ ಆಮ್ಲ, ಕರುಳಿನ ಉದ್ದ ಮುಂತಾಗಿ ಮಾನವನ ಇಡೀ ಜೀರ್ಣಾಂಗ ವ್ಯವಸ್ಥೆ ಸಸ್ಯಾಹಾರ ಅದರಲ್ಲೂ ವಿಶೇಷವಾಗಿ ಹಣ್ಣು- ಹಂಪಲು – ತರಕಾರಿಗಳ ಸೇವನೆ ಮತ್ತು ಜೀರ್ಣಿಸಿಕೊಳ್ಳುವ ಸಲುವಾಗಿ ರೂಪುಗೊಂಡಿವೆ. ಇವ್ಯಾವವೂ ಮಾಂಸಾಹಾರವನ್ನು ಜೀರ್ಣಿಸಿಕೊಳ್ಳಲು ಪೂರಕವಾಗಿಲ್ಲ. ಆದರೂ ನಾಲಿಗೆಯ ಚಪಲದಿಂದ ಮಾಂಸಾಹಾರ ಸೇವಿಸುವ ಮಾನವರ ನಿಸರ್ಗ ವಿರೋಧಿ ಕ್ರಮವು ರೋಗನಿರೋಧಕ ಶಕ್ತಿ ಕುಗ್ಗಲು ಇನ್ನೊಂದು ಪ್ರಮುಖ ಕಾರಣ. ಜನರ ನಡುವೆ ಅಂತರವಿದ್ದಾಗ ಕೊರೊನಾ ವೈರಸ್ ಹರಡುವಿಕೆಗೆ ತಡೆ ಉಂಟಾಗುತ್ತದೆಂಬ ಕಾರಣದಿಂದಾಗಿ ಇಡೀ ದೇಶವನ್ನೇ ಲಾಕ್‍ಡೌನ್ ಮಾಡಲಾಗಿದೆ. ಇದೊಂದು ಕ್ರಮದಿಂದಲೇ ಕೊರೊನಾ ಪ್ರಸರಣ ತಡೆಗಟ್ಟಲು ಸಾಧ್ಯವಾಗದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ತಜ್ಞರು ಹೇಳುತ್ತಿದ್ದಾರೆ. ಆದರೂ ಪಾಶ್ವಾತ್ಯ ದೇಶಗಳಲ್ಲಿ ಈ ರೀತಿ ಮಾಡುತ್ತಿದ್ದಾರೆಂಬ ಕಾರಣಕ್ಕಾಗಿ ಭಾರತದಲ್ಲೂ ಸಾಮಾಜಿಕ ಅಂತರ ಕಾಪಾಡುವದಕ್ಕಾಗಿ ಸಾರ್ವಜನಿಕ ಬದುಕನ್ನು ಸ್ಥಬ್ಧಗೊಳಿಸುವ ಯತ್ನ ನಡೆದಿದೆ. ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ವಿಮಾನ, ರೈಲು, ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಅಂಗಡಿ, ಮುಂಗಟ್ಟುಗಳನ್ನು ಮುಚ್ಚಲಾಗಿದೆ. ವ್ಯಾಪಾರ- ವಹಿವಾಟು , ಉದ್ಯಮ ಕಾರ್ಖಾನೆಗಳನ್ನು ಮುಚ್ಚಿಸಲಾಗಿದೆ. ಸಮೂಹ ಮತ್ತು ದೃಶ್ಯ ಮಾಧ್ಯಮಗಳು ಸುದ್ದಿ ಬಿತ್ತರಿಸುತ್ತಿರುವ ವಿಧಾನಗಳಿಂದಾಗಿ ಸಾಮಾಜಿಕ ಅಂತರವನ್ನು ಕಾದುಕೊಳ್ಳಲು ಕೈಗೊಂಡ ಕ್ರಮಗಳಿಂದ ಸಿಗಬಹುದಾದ ಅಲ್ಪಸ್ವಲ್ಪ ಪ್ರಯೋಜನವೂ ನಿರರ್ಥಕವಾಗುತ್ತಿದೆ. ಯಾಕೆಂದರೆ ಕನ್ನಡದ ಸುದ್ದಿ ವಾಹಿನಿಗಳು ಜನರಲ್ಲಿ ಭಯಭೀತಿ ಬಿತ್ತುವ ಕಾರ್ಯ ಮಾಡುತ್ತಿವೆ. ಇಂತಹ ಸಂದರ್ಭಗಳಲ್ಲಿ ಧನಾತ್ಮಕವಾದ ಸುದ್ದಿಗಳಿಗೆ ಮಹತ್ವ ನೀಡುವ ಬದಲು ನಕಾರಾತ್ಮಕ ಸುದ್ದಿಗಳಿಗೇ ಮಹತ್ವ ನೀಡಲಾಗುತ್ತಿದೆ. ಲಾಕ್‍ಡೌನ್ ಮಾಡುವುದರಿಂದಲೇ ಕೊರೊನಾ ವೈರಸ್‍ನ್ನು ನಿಯಂತ್ರಿಸಲು ಸಾಧ್ಯವೆಂಬುದಾಗಿ ಕನ್ನಡ ಸುದ್ದಿ ವಾಹಿನಿಗಳು ಎರಡು ದಿನಗಳಿಡೀ ಪ್ರಚಾರ ಮಾಡಿದವು. ಸರ್ಕಾರಕ್ಕೆ ಸಲಹೆ ನೀಡಲು ಪೈಪೋಟಿ ನಡೆಸಿ, ಬೆಳಿಗ್ಗೆಯಿಂದ ಸಂಜೆಯವರೆಗೂ ಕೂಗಾಡಿ ಮುಖ್ಯಮಂತ್ರಿಯವರು ಅನಿವಾರ್ಯವಾಗಿ ಲಾಕ್‍ಡೌನ್ ಘೋಷಿಸುವಂತೆ ಮಾಡಲಾಗಿದೆ. ಈ ಸುದ್ದಿವಾಹಿನಿಗಳು ನಡೆಸಿದ ಚರ್ಚೆಗಳಲ್ಲಿ ನಿರ್ವಹಣಾಕಾರರು ತಮ್ಮ ಅಭಿಪ್ರಾಯಗಳನ್ನು ಹೇರುತ್ತಿದ್ದ ರೀತಿ, ಅವರು ಕೂಗಾಡುತ್ತಿದ್ದ ಪರಿ ಅಸಹ್ಯ ಹುಟ್ಟಿಸುತ್ತಿದ್ದವು. ಇವರೆಲ್ಲರೂ ಹಿಂದಿ ವಾಹಿನಿಯ ನಿರ್ವಹಣಾಕಾರರೊಬ್ಬರಿಂದ ಪ್ರೇರಿತವಾಗಿದ್ದುದು ಸ್ಪಷ್ಟವಾಗಿ ಗೋಚÀರಿಸುತ್ತಿತ್ತು. ತಮ್ಮ ಟಿಆರ್‍ಪಿ ಹೆಚ್ಚಿಸಿಕೊಳ್ಳುವ ಭರದಲ್ಲಿ ಹಲವು ಸಕಾರಾತ್ಮಕ ಸಂಗತಿಗಳನ್ನು ಇವರು ಉಪೇಕ್ಷಿಸಿದ್ದು ಎದ್ದು ಕಾಣುತ್ತಿತ್ತು. ಕನ್ನಡ ಸುದ್ದಿವಾಹಿನಿಗಳ ಅಧ್ವಾನದಿಂದಾಗಿ ತಾವು ಮನೆಯಲ್ಲೇ ಕೂಡಿ ಹಾಕಿಕೊಂಡಿರಬೇಕಾಗುತ್ತದೆ. ಅಗತ್ಯದ ವಸ್ತುಗಳು ಸಿಗುವಂತೆ ಇಲ್ಲವೇನೋ ಎಂಬ ಆತಂಕ ಜನರಲ್ಲಿ ಸೃಷ್ಟಿಯಾಗಿ 23 ರ ಸಾಯಂಕಾಲ ದಿನಸಿ, ತರಕಾರಿ ಮುಂತಾದ ಅಗತ್ಯ ವಸ್ತುಗಳ ಖರೀದಿಗಾಗಿ ಜನರು ಅಂಗಡಿಗಳೆದುರು ಮುಗಿ ಬೀಳುವ ಪರಿಸ್ಥಿತಿ ಕರ್ನಾಟಕದ ತುಂಬ ಕಂಡು ಬಂದಿತು. ಅನಗತ್ಯವಾಗಿ ಸೃಷ್ಟಿಯಾದ, ತಪ್ಪಿಸಬಹುದಾಗಿದ್ದ ಇಂತಹ ಜನದಟ್ಟಣೆಯಿಂದಾಗಿ ಸಾಮಾಜಿಕ ಅಂತರ ಕಾದುಕೊಳ್ಳುವ ಉದ್ದೇಶವೇ ವಿಫಲಗೊಂಡಿತ್ತು. ಕೊರೊನಾ ಸೋಂಕಿತರೆಲ್ಲರೂ ಸತ್ತೇ ಹೋಗುತ್ತಾರೆಂಬ ರೀತಿಯಲ್ಲಿ ಕನ್ನಡ ಸುದ್ದಿವಾಹಿನಿಗಳು ಪ್ರಸ್ತುತಪಡಿಸುತ್ತಿದ್ದಾರೆ. ಅತಿ ಹೆಚ್ಚು ಸಾವು ಸಂಭವಿಸಿದ ಇಟಲಿ ಮತ್ತು ಚೀನಾಗಳಲ್ಲಿ ಕೂಡಾ ಮರಣ ಹೊಂದಿದ ಸೋಂಕಿತರ ಪ್ರಮಾಣ ಶೇಕಡಾ 4 ನ್ನು ಮೀರಿಲ್ಲ. ಭಾರತದಲ್ಲಿ ಕೊರೊನಾದಿಂದ ಸಂಭವಿಸಿದ ಮರಣಗಳ ಸಂಖ್ಯೆಯನ್ನು ಬಿತ್ತರಿಸುವುದರ ಜೊತೆಗೇ ಗುಣಮುಖರಾದವರ ಸಂಖ್ಯೆ ಎಷ್ಟೊ ಪಟ್ಟು ಹೆಚ್ಚಿಗೆ ಇದ್ದರೂ ಕೂಡಾ ಅದನ್ನು ಹೇಳುವುದಿಲ್ಲ. ಮರಣ ಹೊಂದಿದವರಿಗೆ ತೀವ್ರ ಸ್ವರೂಪದ ಬೇರೆ ಯಾವುದಾದರೂ ಕಾಯಿಲೆ ಇತ್ತೇ ಎಂಬ ಕುರಿತಾಗಿ ಕೂಡಾ ಇವರು ಮಾಹಿತಿ ನೀಡದೇ ಜನರಲ್ಲಿ ಅನಗತ್ಯ ಭಯ ಹುಟ್ಟಿಸುತ್ತಿದ್ದಾರೆ. ವೈರಸ್ ಸೋಂಕಿತ ದೇಶಗಳ ಮಾಹಿತಿ ನೀಡುವಾಗ ಈ ಪೀಡೆ ನಿಯಂತ್ರಿಸಿರುವ ರಷಿಯಾ, ಉತ್ತರಕೋರಿಯಾ ಮುಂತಾದ ದೇಶಗಳ ಸಕಾರಾತ್ಮಕ ವಿಷಯಗಳನ್ನು ಉಲ್ಲೇಖಿಸುವ ಬದ್ಧತೆ ಈ ವಾಹಿನಿಗಳಿಗೆ ಇಲ್ಲವಾಗಿದೆ. ಇಡೀ ರಾಜ್ಯದ ಲಾಕ್‍ಡೌನ್‍ಗಾಗಿ ಪ್ರತಿಪಾದಿಸುವ ಟಿವಿ ವಾಹಿನಿಗಳಿಗೆ, ದಿನನಿತ್ಯ ದುಡಿದು ಉಣ್ಣ ಬೇಕಾದವರ ಸಂಕಷ್ಟದ ಕುರಿತು ಯೋಚಿಸಲೂ ಪುರುಷೊತ್ತಿಲ್ಲ. ಬೆಳೆದ ತರಕಾರಿ, ಹಣ್ಣು- ಹಂಪಲು, ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲಾಗದೇ ಹಾನಿ ಅನುಭವಿಸುತ್ತಿರುವ ರೈತರ ಭವಣೆ ಕಾಣುವುದಿಲ್ಲ. ಅನಿವಾರ್ಯವಾಗಿ ವ್ಯವಹಾರ– ವಹಿವಾಟುಗಳನ್ನು ಬಂದ್ ಮಾಡುವ ಚಿಕ್ಕಪುಟ್ಟ ವ್ಯಾಪಾರಿಗಳು, ರಸ್ತೆ ಬದಿ ವ್ಯಾಪಾರಿಗಳು, ಚಿಲ್ಲರೆ ಮಾರುಕಟ್ಟೆಯ ವರ್ತಕರು, ಸಣ್ಣ ಉದ್ದಿಮೆಗಳ ಮಾಲೀಕರ ಸಂಕಷ್ಟ ಇವರಿಗೆ ಅರ್ಥವಾಗುವುದಿಲ್ಲ. ಪ್ರತಿ ತಿಂಗಳು ಸಂಬಳ ಪಡೆಯುವ ಅಥವಾ ನಿಶ್ಚಿತ ಆದಾಯವಿರುವ ವರ್ಗದವರನ್ನು ಮನೆಯಲ್ಲೇ ಕೂಡಿ ಹಾಕುವುದರಿಂದ ಅವರಿಗೆ ಆರ್ಥಿಕ ತಲೆಬಿಸಿ ಇರದು.. ಈ ಸೌಲಭ್ಯ ಭಾರತದ 80% ಗೂ ಹೆಚ್ಚಿನ ಜನರಿಗೆ ಇಲ್ಲ. ಆದರೆ ಸಾಲದ ಕಂತು ಕಟ್ಟಲೇಬೇಕಾದ ರಿಕ್ಷಾ, ಟ್ಯಾಕ್ಸಿ ಮಾಲಿಕರಿಗೆ ದುಡಿಮೆಯ ಅವಕಾಶವನ್ನೇ ರದ್ದುಪಡಿಸಿದರೆ ಅವರ ಸಂಕಷ್ಟಕ್ಕೆ ಯಾವ ರೀತಿಯ ಪರಿಹಾರ ಸಿಗುವಂತೆ ಮಾಡಬಹುದೆಂಬ ಕುರಿತು ಈ ಸುದ್ದಿವಾಹಿನಿಗಳು ಚಿಂತನೆ ನಡೆಸುವುದಿಲ್ಲ. ಮಾರ್ಚ್ 31 ರೊಳಗೆ ಸಾಲದ ಅಸಲು ಪಾವತಿಸಿದರೆ ಬಡ್ಡಿ ಮನ್ನಾ ಮಾಡುತ್ತೇವೆಂಬ ಸರ್ಕಾರದ ಘೋಷಣೆಯ ಲಾಭ ಕೃಷಿಕರಿಗೆ ದೊರಕಬೇಕೆಂದರೆ, ಅವರು ಬೆಳೆದ ಮಹಸೂಲು ಮಾರಾಟವಾಗಬೇಕು. ಇಡೀ ದೇಶದಲ್ಲಿ ಲಾಕ್‍ಡೌನ್ ಇರುವ ಇಂದಿನ ಪರಿಸ್ಥಿತಿಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕೃತ್ರಿಮವಾಗಿ ಇಳಿಕೆ ಕಾಣುತ್ತಿರುವಾಗ ಸಾಲ ಮರುಪಾವತಿಯ ದಿನಾಂಕವನ್ನು ಮುಂದೂಡುವುದು ಅನಿವಾರ್ಯ. ಈ ಕುರಿತಾಗಿ ಈ ಸುದ್ದಿವಾಹಿನಿಗಳು ಅಭಿಯಾನವನ್ನೇಕೆ ನಡೆಸುತ್ತಿಲ್ಲ ? ಜನತಾ ಕಫ್ರ್ಯೂ ಹೆಸರಿನಲ್ಲಿ ನಡೆದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ರಾಜ್ಯಗಳು ಅಧಿಕಾರದ ದುರ್ಬಳಕೆ ಮಾಡಿದ್ದನ್ನು ಎತ್ತಿ ಹೇಳುವ ಬದಲಿಗೆ ಪೋಲೀಸರ ಹೇಳಿಕೆಗೆ ಮಹತ್ವ ನೀಡಲಾಯಿತು. ಸ್ವಯಂ ಪ್ರೇರಿತರಾಗಿ ಬಂದ್‍ನಲ್ಲಿ ಪಾಲ್ಗೊಳ್ಳಿ, ಇಲ್ಲವಾದಲ್ಲಿ ನಿಮ್ಮ ಮೇಲೆ ಕೇಸ್ ಹಾಕಲಾಗುವುದು ಎಂಬ ರಾಜ್ಯ ಪೋಲೀಸ್ ಮುಖ್ಯಸ್ಥರು, ಜಿಲ್ಲಾಪೋಲೀಸ್ ವರಿಷ್ಠಾಧಿಕಾರಿಗಳ ಹೇಳಿಕೆಗಳೇ ಮಹತ್ವ ಪಡೆದವು. ಇದೇ ರೀತಿಯ ಹೇಳಿಕೆಗಳನ್ನು ಕೆಲವೆಡೆ ಪೋಲೀಸರು ಮೈಕ್ ಮೂಲಕ ಪ್ರಚಾರ ನಡೆಸಿದರು. ಒಂದೆಡೆ ಸುದ್ದಿ ವಾಹಿನಿಗಳಿಂದ ಬಿತ್ತರವಾಗುವ, ಭಯ ಹುಟ್ಟಿಸುವ ಅರ್ಧಂಬದ್ಧ ಮಾಹಿತಿಗಳು, ಇನ್ನೊಂದೆಡೆ ಅಧಿಕಾರಿಗಳ ದಬಾವಣೆಯಿಂದಾಗಿ ಕಳೆದ ರವಿವಾರದ ಜನತಾ ಕಫ್ರ್ಯೂ ಯಶಸ್ವಿಯಾದಂತೆ ಕಂಡೀತೇ ಹೊರತೂ ನೈಜವಾದ ಸ್ವಪ್ರೇರಣೆಯಿಂದಲ್ಲ. ನಿಸ್ವಾರ್ಥದಿಂದ ಸೇವೆ ಸಲ್ಲಿಸುತ್ತಿರುವ ವೈದ್ಯರು, ಪೋಲೀಸರು, ಮಾಧ್ಯಮದವರು, ಸೈನಿಕರು, ಸ್ವಯಂ ಸೇವಕರು, ಮುಂತಾದವರಿಗಾಗಿ ಕೃತಜ್ಞತೆ ಸಲ್ಲಿಸಲು ರವಿವಾರ ಸಂಜೆ 5 ಗಂಟೆಗೆ ನಡೆಸಿದ ಚಪ್ಪಾಳೆ ಮತ್ತು ಘಂಟನಾದ ಅಭಿಯಾನದ ಭಾವುಕತೆಗೆ ಒಳಗಾದ ಜನತೆ ವಾಸ್ತವವನ್ನು ಗಮನಿಸಲೇ ಇಲ್ಲ. ಮದ್ಯಪ್ರದೇಶದ ಸರ್ಕಾರವನ್ನು ಪತನಗೊಳಿಸಲು ಸಾವಿರಾರು ಕೋಟಿ ರೂಪಾಯಿ ಖರ್ಚುಮಾಡಿ ಅನೈತಿಕ ವಿಧಾನದಿಂದ ತಮ್ಮ ಪಕ್ಷದ ಸರ್ಕಾರ ಸ್ಥಾಪಿಸಲು ಶ್ರಮಿಸಿದ ಪ್ರಧಾನಿಯವರ ಸ್ವಾರ್ಥ ಜನರಿಗೆ ಕಾಣಲೇ ಇಲ್ಲ. ದೇಶೀಯ ಪರಿಸ್ಥಿತಿಗೆ ಅನುಗುಣವಾಗಿ ಕೊರೊನಾ ವಿರುದ್ಧದ ಹೋರಾಟ ಕೈಗೊಳ್ಳದೇ, ಪಾಶ್ಚಾತ್ಯ ದೇಶಗಳ ಪದ್ಧತಿಯನ್ನು ಇಲ್ಲಿಯೂ ಅಳವಡಿಸಿ ಅಂತರಾಷ್ಟ್ರೀಯ ಮನ್ನಣೆಗಾಗಿ ನಡೆಸುವ ಪ್ರಯತ್ನವನ್ನು ಜನರು ಗಮನಿಸಲೇ ಇಲ್ಲ. ಕೇಂದ್ರ ಸರ್ಕಾರದ ಆಪ್ತವಲಯದವರು ಸಾಲಮರುಪಾವತಿ, ಮಾಡದಿರುವ ಕಾರಣಕ್ಕಾಗಿ ಸಮಸ್ಯೆಗೊಳಗಾದ ಯಸ್ ಬ್ಯಾಂಕ್‍ನ ಪುನಶ್ಚೇತನಕ್ಕಾಗಿ ಸರ್ಕಾರಿ ಸ್ವಾಮ್ಯದ ಎಸ್ ಬಿಐನ ನಿಧಿಯನ್ನು ಬಳಸಿದ್ದು ಜನರಿಗೆ ಅರ್ಥವೇ ಆಗಲಿಲ್ಲ. ಖಾಸಗಿ ಬ್ಯಾಂಕ್ ರಕ್ಷಣೆಗಾಗಿ ಒಂದೇ ವಾರದಲ್ಲಿ ಧಾವಿಸಿ ಬಂದ ಕೇಂದ್ರ ಸರ್ಕಾರಕ್ಕೆ ಆರು ತಿಂಗಳಿನಿಂದಲೂ ಪರಿತಪಿಸುತ್ತಿರುವ ಸಹಕಾರಿ ರಂಗದ ಪಿ.ಎಮ್.ಸಿ ಬ್ಯಾಂಕ್‍ನ ಗ್ರಾಹಕರು ಕಾಣುವುದೇ ಇಲ್ಲ. ಕುಸಿಯುತ್ತಿರುವ ಅರ್ಥವ್ಯವಸ್ಥೆಯಿಂದ ಸಂಕಷ್ಠಕ್ಕೊಳಗಾಗಿರುವ ಜನಸಾಮಾನ್ಯರ ಮನಸ್ಸನ್ನು ಬೇರೆಡೆ ತಿರುಗಿಸುವ ಕ್ರಮವಾಗಿ ನಡೆಸುವ ಚಪ್ಪಾಳೆ ಅಭಿಯಾನದಂತಹ ಜನಪ್ರಿಯ ಕಾರ್ಯಕ್ರಮಗಳಿಗೆ ಸುದ್ದಿ ಮಾದ್ಯಮಗಳೂ ಬೆಂಬಲ ನೀಡುತ್ತಿವೆ. ಯಾಕೆಂದರೆ ಅದರ ಮಾಲೀಕರುಗಳು ಮೊದಲ ಗುಂಪಿಗೆ ಸೇರಿದವರು. ಜನರು ಗುಂಪುಗುಂಪಾಗಿ ಸೇರಿ ಚಪ್ಪಾಳೆ, ಜಾಗಟೆ ಬಡಿಯುತ್ತಾ ಮೆರವಣಿಗೆ ಹೋಗಲು ಮಾಧ್ಯಮಗಳ ಕ್ಯಾಮರಾಗಳು ಪ್ರೇರಣೆ ನೀಡಿ, ಸಾಮಾಜಿಕ ಅಂತರ ಕಾಪಾಡುವ ಮೂಲ ಉದ್ದೇಶವನ್ನೇ ಮರೆಸಿವೆ. ವ್ಯಕ್ತಿ ಪೂಜೆ ಮತ್ತು ನಾಯಕರ ಕುರಿತು ಅಂಧಾಭಿಮಾನ , ಚಮಾಚಾಗಿರಿ ಮತ್ತು ನಾಯಕರ ಕುರಿತು ಚಪ್ಪಾಳೆ, ಶಂಖ ಧ್ವನಿ ಮುಂತಾದವುಗಳಿಂದ ಕೊರೊನಾ ಭೂತವನ್ನು (?) ದೂರ ಓಡಿಸಲು ಸಾಧ್ಯ. ಅಂಥವರಿಗೆ ಮಾರ್ಚ್ 22 ಅಮವಾಸ್ಯೆಯಾಗಿ ಕಾಣುತ್ತದೆ. (ಇನ್ನೂ 2 ದಿನ ತಡವಿದ್ದರೂ ಸಹ) ಸೋಂಕು ತಡೆಗಾಗಿ ಮುಖಕ್ಕೆ ಗವಸು ಧರಿಸಲು ಮಾಧ್ಯಮಗಳ ಪ್ರೇರಣೆಯೂ ಕಾರಣ. ಸೋಂಕಿತ ವ್ಯಕ್ತಿಯು ಸೀನಿದಾಗ, ಕೆಮ್ಮಿದಾಗ ವೈರಸ್ ಗಾಳಿಯಲ್ಲಿ ಸೇರಬಾರದೆಂಬ ಕಾರಣಕ್ಕೆ ಮುಖಕ್ಕೆ ಗೌಸ್ ಧರಿಸಬೇಕು. ಆದರೆ, ಆರೋಗ್ಯವಂತರು ಮುಖದ ಗವಸು ಧರಿಸಿ ಓಡಾಡುತ್ತಾರೆ. ಇದು ಗೊಡ್ಡು ಕಂದಾಚಾರಿಗಳ ಮಡಿಧಾರಣೆಯಂತಿದೆ. ಪೂಜೆ ಮತ್ತು ಊಟದ ಸಮಯದಲ್ಲಿ ರೇಷ್ಮೆ ಬಟ್ಟೆ ಧಾರಣೆ ಒಳಿತೆಂಬ ಕಾರಣಕ್ಕೆ , ತಿಂಗಳುಗಟ್ಟಲೇ ತೊಳೆಯದೇ ಇದ್ದರೂ ಅದೇ ವಸ್ತ್ರವನ್ನು ಮಡಿ ಎಂದು ಭಾವಿಸಿ ಬಳಸುವ ರೀತಿಯಿದು. ಸೋಂಕು ತಡೆಯಲು ಮೂಗು, ಬಾಯಿ ಕಣ್ಣನ್ನು ಪದೇ ಪದೇ ಕೈ ತೊಳೆಯದೇ ಮುಟ್ಟಬಾರದು ಎಂಬುದು ಸರಿ. ಮುಖಕ್ಕೆ ಗವಸು ಧರಿಸಿದಾಗ ಆಗುವ ಅಲವರಿಕೆಯಿಂದ ಅಥವಾ ಅದನ್ನು ಸರಿಪಡಿಸಲು ಕೈ ಪದೇಪದೇ ಅಲ್ಲಿಗೇ ಹೋಗುತ್ತದೆ. ಮುಖಗೌಸನ್ನು ಪ್ರತಿಬಾರಿ ಧರಿಸುವಾಗಲೂ ಅದನ್ನು ಶುಚಿಗೊಳಿಸಲು ಸಾಧ್ಯವೇ? ಭಾರತೀಯರಲ್ಲಿ ರೋಗನಿರೋಧಕ ಶಕ್ತಿ ಪಾಶ್ಚಾತ್ಯರಿಗೆ ಹೋಲಿಸಿದರೆ ತುಂಬಾ ಹೆಚ್ಚು. ನಮ್ಮ ಜೀವನದ ರೀತಿ, ನೀತಿಗಳು, ವಿಧಿ- ವಿಧಾನಗಳು ಆರೋಗ್ಯ ರಕ್ಷಣೆಗೆ ಪೂರಕ. ಉದಾಹರಣೆಗಾಗಿ ಕೈ ಕುಲುಕುವ ಬದಲಿಗೆ ನಮಸ್ಕಾರ. ಊಟಕ್ಕೂ ಮೊದಲು ಕೈಕಾಲು ತೊಳೆಯುವುದು, ಹೊರಗಿನಿಂದ ಬಂದು ಮನೆ ಸೇರಿದೊಡನೆ ಬಟ್ಟೆ ಬದಲಾಯಿಸುವುದು . ಪ್ರಾರ್ಥನೆ, ಪೂಜೆ ಇತ್ಯಾದಿ. ಕೊರೊನಾ ವೈರಾಣುವಿಗೆ ನೀಡುತ್ತಿರುವ ಪ್ರಚಾರದಷ್ಟು ಅದು ಪ್ರಬಲವಲ್ಲ. ಈ ಸೋಂಕನ್ನು ಸಮರ್ಥವಾಗಿ ಎದುರಿಸುವ ಸಾಮಥ್ರ್ಯ ಸಾಮಾನ್ಯ ಭಾರತೀಯರ ದೇಹದಲ್ಲಿ, ಬದುಕಿನ ರೀತಿಯಲ್ಲಿ ಅಂತರ್ಗತವಾಗಿದೆ. ಸರ್ಕಾರ ಮತ್ತು ಮಾಧ್ಯಮಗಳು ಮಾಡಬೇಕಾದ ಮೊದಲ ಕ್ರಮವೆಂದರೆ ಜನರಲ್ಲಿ ಅನಗತ್ಯವಾದ ಭಯ ಮೂಡಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸರ್ಕಾರ ಕೈಗೊಳ್ಳುತ್ತಿರುವ ಪಾಶ್ಚಾತ್ಯ ದೇಶಗಳ ಅಂಧಾನುಕರಣೆಯ ಕ್ರಮಗಳು ಹಾಗೂ ಇವು ಮಾಧ್ಯಮಗಳಲ್ಲಿ ಅತಿಯಾಗಿ ವಿಜೃಂಭಿತವಾಗಿರುವುದರಿಂದ ಜನರು ಭಯಭೀತರಾಗಿದ್ದಾರೆ, ಆತಂಕಗೊಂಡಿದ್ದಾರೆ. ಆದ್ದರಿಂದಲೇ ಬೆಂಗಳೂರಿನಿಂದ

ಭಯವೇ ಅಪಾಯಕಾರಿ Read Post »

ಪುಸ್ತಕ ಸಂಗಾತಿ

ನಾನು ಓದಿದ ಕಾದಂಬರಿ

ಹರಿಚಿತ್ತ ಸತ್ಯ ವಸುಧೇಂದ್ರ ಹರಿಚಿತ್ತ ಸತ್ಯ ವಸುಧೇಂದ್ರ ಅವರ ಮೊದಲ ಕಾದಂಬರಿ. ಅದರ ಮುದ್ರಣ ಪ್ರತಿ ಲಭ್ಯವಿಲ್ಲದೇ ಓದಲಾಗಿರಲಿಲ್ಲ. ಈ ದುರಿತ ಕಾಲದಲ್ಲಿ ರಿಯಾಯಿತಿ ದರದಲ್ಲಿ ಈ ಕೃತಿ ಲಭ್ಯವಿದೆ. ಸರಳ, ಸುಂದರವಾದ ಸಾಮಾಜಿಕ ಕಾದಂಬರಿಯಿದು. ಸರಾಗವಾಗಿ ಓದಿಸಿಕೊಂಡು ಹೋಗುತ್ತದೆ. ಬಳ್ಳಾರಿ, ಸಂಡೂರು ಮತ್ತು ಹೊಸಪೇಟೆಯ ಸಮೃದ್ಧ ಚಿತ್ರಣ ಈ ಕೃತಿಯಲ್ಲಿದೆ. ದಿ. ಸುಬ್ಬರಾಯರು ಮತ್ತು ರಂಗಮ್ಮನವರ ಏಕಮಾತ್ರ ಪುತ್ರಿ ಪದ್ದಿ. ಪದ್ದಿ ಸ್ವಲ್ಪ ಚೆಲ್ಲು ಸ್ವಭಾವದವಳು. ಅವಳನ್ನು ಬಳ್ಳಾರಿಯಿಂದ ಸಂಡೂರಿಗೆ, ವರನಾದ ರಾಘವೇಂದ್ರನಿಗೆ ತೋರಿಸಲು ಹೊರಟಿರುವ ಸನ್ನಿವೇಶದಿಂದ ಕತೆ ಆರಂಭವಾಗುತ್ತದೆ. ವಕೀಲ ಬಿಂಧುಮಾದವರು ವಿಧವೆ ರಂಗಮ್ಮನವರ ಕುಟುಂಬಕ್ಕೆ ಆಶ್ರಯವಾಗಲು ಕಾರಣವಾಗುವ ಸನ್ನಿವೇಶ ತಮಾಶೆಯಾಗಿದೆ. ಆಚಾರ್ಯನಾಗಿ ಸಾಧನೆ ಮಾಡುವ ಕರಿಹನುಮನ ಹಿನ್ನೆಲೆ, ರಂಗಮ್ಮನವರೊಂದಿಗೆ ಆತ್ಮೀಯತೆ, ಪದ್ದಿಯ ಜಾತಕ ತೋರಿಸಿದಾಗ ಅವರು ಹೇಳುವ ಭವಿಷ್ಯ ಕಾದಂಬರಿಯಲ್ಲಿ ಕೊನೆಯಲ್ಲಿ ನಿಜವಾಗುವುದು ಕುತೂಹಲಕಾರಿಯಾಗಿದೆ. ಎಲ್ಲೆಂದರಲ್ಲಿ ನಿದ್ದೆ ಮಾಡುವ ಶ್ರೀಪತಿ ಹನುಮಂತನ ಪ್ರತಿರೂಪವಾದ ಕೋತಿಗಳಿಗೆ ಕೈಮುಗಿಯುವ ಮನುಷ್ಯ. ಅವನ ಹೆಂಡತಿ ಸುಭದ್ರಮ್ಮನ ಗೋಟಾವಳಿ ನಗೆ ತರಿಸುತ್ತಿದೆ. ಪದ್ಮಾವತಿ ಮತ್ತು ಅವಳ ಗೆಳತಿ ಪಂಕಜಳ ಸ್ನೇಹ, ಅವರ ಸಾಹಸಗಳು ಕಚಗುಳಿಯಿಡುತ್ತವೆ. ಪಂಕಜಳ ದುಬಾಯಿ ಗಂಡ ವಿಮಾನ ಯಾನದಲ್ಲಿ ಭಸ್ಮವಾಗಿದ್ದು ಕಾಡುತ್ತದೆ . ಮೋಟಾರು ರಾಮರಾಯರು, ವನಮಾಲಾಬಾಯಿ ಮತ್ತು ರಾಘವೇಂದ್ರನ ಪಾತ್ರಗಳು ಸಶಕ್ತವಾಗಿ ಮೂಡಿಬಂದಿವೆ. ವಧು ಪರೀಕ್ಷೆ ಮಾಡುವ ಗುಡೇಕೋಟಿ ಗೋವಿಂದಾಚಾರ್ಯ ಮನಸೆಳೆಯುತ್ತಾರೆ. ರಾಘುವನ್ನು ಪದ್ದಿಯೇ ತಿರಸ್ಕರಿಸಲು ಇರುವ ಕಾರಣ ಪದ್ದಿಯ ಗುಣಧರ್ಮವನ್ನು ಸರಿಯಾಗಿ ಬಿಂಬಿಸುತ್ತದೆ. ಮುಂದೆ ರಾಘು ರಾಮಸಾಗರದ ಸುಧಾಳ ಜೊತೆ ಮದುವೆಯಾಗುತ್ತಾನೆ. ಪ್ರತಿಭಾ, ಪ್ರಮೀಳಾ ಮತ್ತು ಪ್ರಕಾಶನ ಜನನ ಮತ್ತು ಪ್ರಕಾಶನ ಅಂಧತ್ವ ಗೊತ್ತಾದಾಗ ನಮಗೂ ಸಂಕಟವಾಗುತ್ತದೆ. ಆದರೆ ಪ್ರಕಾಶನ ಚುರುಕುತನ ಅದನ್ನು ಮರೆಸುತ್ತದೆ. ಸಿರೇಕೊಳ್ಳದ ಆಚಾರ್ಯರು ಮತ್ತು ಅವರು ಸೂಚಿಸುವ ಡಾ. ಥಾಮಸ್ ರಿಂದ ಪದ್ದಿಯ ಮನೋರೋಗ ವಾಸಿಯಾಗುತ್ತದೆ.ಆನೆಗೊಂದಿ ದ್ವೀಪದ ನವವೃಂದಾವನದಲ್ಲಿ ಒಂದು ದುರಂತ ಅಂತ್ಯದೊಂದಿಗೆ ಕಾದಂಬರಿ ಮುಗಿಯುತ್ತದೆ. ಉಪಸಂಹಾರದಲ್ಲಿ ನಾವು ಊಹಿಸಿದ ತಿರುವಿನೊಂದಿಗೆ ಕತೆ ಅಂತ್ಯಗೊಳ್ಳುತ್ತದೆ. ಹರಿಚಿತ್ತ ಸತ್ಯ, ಹಲವು ಕಥಾಸಂಕಲನಗಳನ್ನು ಓದಿ ಅನಂತರ ವಸುಧೇಂದ್ರರ ತೇಜೋ ತುಂಗಭದ್ರಾ ಕಾದಂಬರಿ ಓದಿದರೆ ಅವರ ಸಾಹಿತ್ಯದ ಹಾದಿಯ ಅರಿವು ನಮಗಾಗಬಹುದು. ಒಮ್ಮೆ ಓದಬೇಕಾದ ಕೃತಿಯಿದು. ** ಅಜಿತ್ ಹರೀಶಿ ಡಾ.ಅಜಿತ್ ಹರೀಶಿ

ನಾನು ಓದಿದ ಕಾದಂಬರಿ Read Post »

ಪುಸ್ತಕ ಸಂಗಾತಿ

ನಾನು ಓದಿದ ಕಾದಂಬರಿ

ಅಶ್ವತ್ಥಾಮನ್ ಜೋಗಿ ನನ್ನ ಪ್ರಕಾರ ಒಂದು ಬರವಣಿಗೆ ಅಥವಾ ಪುಸ್ತಕ “ಚೆನ್ನಾಗಿದೆ” ಎನ್ನುವುದಕ್ಕೆ ಬರವಣಿಗೆಯ ಪ್ರಪಂಚದಲ್ಲಿ ಕ್ರಾಂತಿಯನ್ನು ಉಂಟುಮಾಡುವಂತಹ ಅಥವಾ ಇತಿಹಾಸವನ್ನು ಸೃಷ್ಟಿ ಮಾಡುವಂತಹ ಯಾವುದೋ ಕಾರಣದ ಅಗತ್ಯವಿಲ್ಲ. ನಾವು ದಿನಸಿ ಅಂಗಡಿಯಲ್ಲೋ, ತರಕಾರಿ ಕೊಳ್ಳುವಾಗಲೋ ಅಪರೂಪಕ್ಕೆ ಎದುರಾಗುವ ಮುಖವೊಂದು ಅಥವಾ ಬಿಡುವಾದಾಗ ನಮ್ಮನ್ನ ನಾವು ವಿಮರ್ಶಿಸಿಕೊಂಡಾಗ ಸಿಗುವ ಪಾತ್ರವೊಂದು ಕತೆಯೋ ಕಾದಂಬರಿಯೋ ಆಗಿ ನಮ್ಮೆದುರು ನಿಂತಾಗ ಸಿಗುವ ಸಣ್ಣದೊಂದು ಆಶ್ಚರ್ಯಚಕಿತ ಸಂತೋಷವಿದೆಯಲ್ಲ ಅದು ಒಂದು ಓದಿಗೆ ಸಿಗಬೇಕಾದ ಸಕಲ ಸಮಾಧಾನವನ್ನೂ ಒದಗಿಸಬಲ್ಲದು. ಅಂತಹ ಪುಸ್ತಕಗಳಲ್ಲೊಂದು ಜೋಗಿಯವರ ಕಾದಂಬರಿ “ಅಶ್ವತ್ಥಾಮನ್”. ಕಾದಂಬರಿಯ ಹೆಸರೇ ಹೇಳುವಂತೆ ಮೇಲ್ನೋಟಕ್ಕೆ ಇದೊಂದು ವ್ಯಕ್ತೀಕೇಂದ್ರಿತ ಕೃತಿ. ಅಶ್ವತ್ಥಾಮ ಎಂಬ ಜಿಗಟು ವ್ಯಕ್ತಿತ್ವವೊಂದು ಅಶ್ವತ್ಥಾಮನ್ ಎಂಬ ಹೆಸರಿನ ಜನಪ್ರಿಯ ನಟನಾಗಿ, ನಟನೆಯನ್ನೂ ಜನಪ್ರಿಯತೆಯನ್ನೂ ಅಹಂಕಾರವನ್ನಾಗಿಸಿಕೊಂಡು, ಅಹಂಕಾರವನ್ನೇ ಶಕ್ತಿಯಾಗಿಸಿಕೊಂಡು ಬದುಕುವ ಪಾತ್ರ ನಮಗೇ ಅರಿವಿಲ್ಲದಂತೆ ನಮ್ಮದಾಗುತ್ತ ಹೋಗುವುದು ಈ ಕೃತಿಯ ಅಹಂಕಾರ. ಈ ಪಾತ್ರವನ್ನು ಪೋಷಿಸಲೂ ಆಗದೇ, ದ್ವೇಷಿಸಲೂ ಆಗದೇ, ಕೊನೆಗೆ ನಮ್ಮೊಳಗೆಲ್ಲೋ ಅಡಗಿ ಕುಳಿತಿರುವ ಅಶ್ವತ್ಥಾಮನನ್ನು ಕಾದಂಬರಿಯುದ್ದಕ್ಕೂ ಅನುಭವಿಸುತ್ತ ಹೋಗುತ್ತೇವೆ. ಪಾರ್ಶ್ವವಾಯುವಿಗೆ ಬಲಿಯಾದ ಅಶ್ವತ್ಥಾಮನ್ ತನ್ನ ಆತ್ಮಚರಿತ್ರೆ ಬರೆಸಬೇಕೆಂಬ ಆಶಯದಲ್ಲಿ ಕೊಂಚ ಸಿನಿಮೀಯವಾಗಿ ಆರಂಭವಾಗುವ ಈ ಕಾದಂಬರಿ, “ಎದುರಾಳಿ ಸೋತ ಮೇಲೆ ನಾನು ಯಾರ ಜೊತೆಗೆ ಆಡಲಿ, ನನ್ನ ಆಟ ಮುಗಿಯಿತು” ಎನ್ನುವ ಮಾತಿನಿಂದ ಅಲ್ಲೊಂದು ತಾತ್ವಿಕ ವಾತಾವರಣವನ್ನು ಸೃಷ್ಟಿ ಮಾಡಿ, ಓದುಗ ಅಶ್ವತ್ಥಾಮನೊಂದಿಗೆ ಮುಖಾಮುಖಿಯಾಗತೊಡಗುತ್ತಾನೆ. ಎದುರಾಗುವ ಪಾತ್ರಗಳಲ್ಲಿ, ದೃಶ್ಯಗಳಲ್ಲಿ ಅಶ್ವತ್ಥಾಮನಿದ್ದಾನೋ, ಅಶ್ವತ್ಥಾಮನ್ ಇರುತ್ತಾನೋ ಅಥವಾ ನಮ್ಮೊಳಗಿರುವ ನಾವು ಒಬ್ಬರಿಗೊಬ್ಬರು ಎದುರಾಗಿ ಕಣ್ಣು ತಪ್ಪಿಸುತ್ತೇವೋ ಎನ್ನುವುದು ನಮ್ಮ ಅನುಭವಕ್ಕೆ ಮಾತ್ರ ದಕ್ಕುವ ವಿಷಯ. “ಮಾತು” ಇಲ್ಲಿ ಕೇವಲ ಮಾತಾಗದೇ, ಕಳೆದುಹೋಗದೇ ಅನುಭಾವವಾಗಿ ಜೀವ ತಳೆದಿದೆ; ಸರಳವಾಗಿ, ಕೆಲವೊಮ್ಮೆ ಸಿನಿಮೀಯವಾಗಿ ತಾತ್ವಿಕವಾದ ನೆಲೆಗಟ್ಟಿನಲ್ಲಿ “ಕಾಲ”ವನ್ನು ಕಟ್ಟಿಕೊಟ್ಟಿದೆ. ಅಶ್ವತ್ಥಾಮನ ಪಾತ್ರ ಅನಾವರಣಗೊಳ್ಳುತ್ತ ಹೋಗುವುದು ಅವನ ಅಹಂಕಾರವನ್ನು ಜೀವಂತವಾಗಿರಿಸುವ ಹೆಣ್ಣುಪಾತ್ರಗಳ ಮೂಲಕ. ದೀಪಾವಳಿಯ ದಿನ ಎಣ್ಣೆ ಹಚ್ಚಲು ಬಂದ ಸುಲೋಚನಾ ತನ್ನನ್ನು ಸಾಯಿಸಲೇ ಬಂದವಳೆಂದು ಕಣ್ಣುಮುಚ್ಚಿ, ಹಸಿದ ಗಂಡಸಿನ ಪಾತ್ರವನ್ನು ಎಷ್ಟು ಚೆನ್ನಾಗಿ ನಟಿಸಿದೆ ಎನ್ನುವ ನಟ, ನಮ್ಮ ಕಣ್ಣೆದುರಿಗೊಂದು ಹೊಸ ಪ್ರಪಂಚವನ್ನು ತೆರೆದಿಡುವಲ್ಲಿ ಯಶಸ್ವಿಯಾಗುತ್ತಾನೆ. ಪ್ರತೀ ಕ್ಷಣದ ಬದುಕು ಒಂದಿಲ್ಲೊಂದು ಬಗೆಯ ನಟನೆಯೇ ಆದಾಗ, ಕಣ್ಣುಮುಚ್ಚಿ ನಾವು ನಾವಾಗಿ ನಟಿಸುವುದು ಸರಳವೆನ್ನುವಂಥ ವಿಲಕ್ಷಣ ಸತ್ಯಗಳೆಲ್ಲ ನಮ್ಮ ಸೈದ್ಧಾಂತಿಕ ನಿಲುವುಗಳನ್ನು ಪ್ರಶ್ನಿಸದೇ ಬಿಡುವುದಿಲ್ಲ. ಮೊದಲನೇ ಹೆಂಡತಿ ಶುಭಾಂಗಿನಿ ತನ್ನ ಪಾಲಿನ ದೇವತೆ ಎಂದು ಗೌರವಿಸುವ ಅಶ್ವತ್ಥಾಮ, ಎರಡನೇ ಹೆಂಡತಿ ಸರೋಜಿನಿ ತನ್ನನ್ನು ಪಳಗಿಸಲು ಯತ್ನಿಸುತ್ತಿದ್ದಾಳೆ ಎನ್ನುವ ಕಾರಣಕ್ಕೆ ಬಿಡುಗಡೆ ಬಯಸಿ, ದಾಂಪತ್ಯದ ನೀತಿ ನಿಲುವುಗಳನ್ನೇ ಇಕ್ಕಟ್ಟಿಗೆ ಸಿಲುಕಿಸುವ ಹುಚ್ಚು ಮನಸ್ಥಿತಿಯಂತೆ ಭಾಸವಾಗಿಯೂ ಪರಿಹಾರವಿಲ್ಲದ ಗೊಂದಲದಂತೆ ಮನಸ್ಸಲ್ಲಿ ಉಳಿದುಬಿಡುತ್ತಾನೆ. “ನಿಜವಾದ ನೋವು ಕೊಡುವುದಕ್ಕೂ ಶಕ್ತಿ ಬೇಕು; ನನ್ನಲ್ಲಿ ನೋವಿಲ್ಲದೇ ಹೋದರೆ ನಾನು ಮತ್ತೊಬ್ಬರಿಗೆ ಎಲ್ಲಿಂದ ಕೊಡ್ಲೊ” ಎನ್ನುವಂತಹ ಅಸಹಜ ಮಾತುಗಳು ಸತ್ಯಾಸತ್ಯತೆಯ ವಿಮರ್ಶೆಗಳನ್ನೆಲ್ಲ ಮೀರಿ ನೆನಪಲ್ಲಿ ಉಳಿದುಕೊಳ್ಳುತ್ತವೆ. “ನಾನು ಅವಳಿಂದ ಬಿಡಿಸಿಕೊಳ್ಳಲು ಹವಣಿಸಲಿಲ್ಲ, ಅವಳಾಗಿಯೇ ನನ್ನಿಂದ ದೂರ ಹೋಗುವಂತೆ ಮಾಡುವ ಉಪಾಯಗಳನ್ನು ಹುಡುಕುತ್ತಿದ್ದೆ” ಎಂದು ಮೂರನೇ ಹೆಂಡತಿಯಿಂದಲೂ ಬಿಡುಗಡೆಗೆ ತವಕಿಸುವ ಅಶ್ವತ್ಥಾಮ ವಿಕೃತ ಮನಸ್ಸಿನ ಪ್ರತಿರೂಪವಾಗಿ ಹೊರನೋಟಕ್ಕೆ ಭಾಸವಾದರೂ , ನಟಿಸುತ್ತಲೇ ನೈಜವಾಗುವ ಅಸಹಾಯಕ ಅಲೆದಾಟದ ಮನುಷ್ಯನ ಸಹಜ ಮನಸ್ಥಿತಿಯ ತಲ್ಲಣಗಳಾಗಿ ನಮ್ಮೊಳಗೊಂದಾಗುತ್ತಾನೆ. “ದುರದೃಷ್ಟವಶಾತ್ ನನ್ನ ಸ್ಥಾಯೀಭಾವ ನಟನೆ” ಎನ್ನುವಂತಹ ಹೇಳಿಕೆಗಳು ಕೇವಲ ಹೇಳಿಕೆಗಳಾಗದೇ, ಓದುಗನೊಬ್ಬನ ಹಳವಳಿಕೆಗಳನ್ನು ಬರೆಯುವವ ಹೇಳುತ್ತಾ ಹೋದಂತೆ ಎದೆಗಿಳಿಯುತ್ತವೆ. ಪಾತ್ರಗಳ ಸೃಷ್ಟಿಯ ಜೊತೆಗೆ ಭಾಷಪ್ರಯೋಗ ಮತ್ತು ನಿರೂಪಣಾ ವಿಧಾನವೂ ಕೂಡಾ ಈ ಕೃತಿಯನ್ನು ಸುಂದರವಾಗಿಸಿರುವುದರಲ್ಲಿ ಸಂಶಯವಿಲ್ಲ. ಯಾವುದೇ ಆಡಂಬರವಿಲ್ಲದ, ಅನಗತ್ಯ ಅಲಂಕಾರಗಳಿಲ್ಲದ ಶಬ್ದಗಳ ಬಳಕೆ ಹಾಗೂ ಪಾತ್ರಕ್ಕೆ ತಕ್ಕ ಭಾಷಾಪ್ರಯೋಗ ಈ ಕೃತಿಯ ಆಕರ್ಷಣೆ. “ನನ್ನ ಅಹಂಕಾರವೇ ನನ್ನ ಶಕ್ತಿ” ಎನ್ನುವ ಮಾತು ಅದನ್ನು ಆಡಿದವನ ಸಂಪೂರ್ಣ ವ್ಯಕ್ತಿತ್ವದ ಪರಿಚಯ ಮಾಡಿಕೊಡುವಲ್ಲಿ ಯಶಸ್ವಿಯಾಗುತ್ತದೆ. ಹಾಗೆಯೇ ನಿರೂಪಣೆಯಲ್ಲೂ ಲೇಖಕರೇ ಹೇಳುವಂತೆ ಸಿದ್ಧಪ್ರಕಾರಗಳಿಂದ ಆಚೆ ನಿಲ್ಲುವ ಈ ಕೃತಿ “ಮಾತುಕತೆ”ಯ ಮಾದರಿಯಲ್ಲಿದ್ದೂ ವಾಚಾಳಿಯಾಗದೇ ವಿಶಿಷ್ಟವಾಗುಳಿಯುತ್ತದೆ. “ಇದನ್ನು ಕಬೀರ ಬರೆದನೋ ನಾನೇ ಬರೆದೇನೋ ನೆನಪಿಲ್ಲ. ನಾನು ಕಬೀರನಾದಾಗ ಬರೆದಿರಬಹುದೇನೋ?” ಎನ್ನುವ ಮಾತಿನಲ್ಲಿ ಅಸ್ಪಷ್ಟತೆಯೇ ಪಾತ್ರಸೃಷ್ಟಿಯ ಸೂಕ್ಷ್ಮತೆಗೆ ಒದಗಿಬಂದಿರುವುದನ್ನು ಅಲ್ಲಗಳೆಯುವಂತಿಲ್ಲ. ಹೀಗೆ ಉದಾಹರಿಸುತ್ತ ಹೋಗುವಂತಹ ಸಾಕಷ್ಟು ಭಾಷಪ್ರಯೋಗ ಹಾಗೂ ವಿಶಿಷ್ಟ ನಿರೂಪಣೆ ಕಾದಂಬರಿಯುದ್ದಕ್ಕೂ ಕಾಣಬಹುದು. ಕಾದಂಬರಿಯ ಅಂತ್ಯ ನಾಟಕೀಯವೆನಿಸಿದರೂ ಕೃತಿಯ ಆಶಯವನ್ನು ಹಾನಿ ಮಾಡಿಲ್ಲ. ಹೀಗೆ ತಾನೇ ಪಾತ್ರವಾಗುತ್ತ, ಪಾತ್ರದುದ್ದಕ್ಕೂ ನಟಿಸುತ್ತಾ, ಓದುಗನನ್ನು ನಟನಾಗಿಸುತ್ತ ತಳಮಳಕ್ಕೆ ತಳ್ಳುವ ಅಶ್ವತ್ಥಾಮ ನಟನಾಗಿ, ಪಾತ್ರವಾಗಿ, ನಟನೆಯಾಗಿ, ಓದುಗನ ನೆನಪಲ್ಲಿ ಉಳಿಯುವ ಚಿತ್ರವಾಗಿ ನಿಲ್ಲುತ್ತಾನೆ ****************************** ಅಂಜನಾ ಹೆಗಡೆ

ನಾನು ಓದಿದ ಕಾದಂಬರಿ Read Post »

ಅಂಕಣ ಸಂಗಾತಿ

ಗಝಲ್ ಲೋಕ

ಬಸವರಾಜ್ ಕಾಸೆ ಗಝಲ್ ಬಗ್ಗೆ ಮಾಹಿತಿ ನೀಡುವ ಮತ್ತು ಗಝಲ್ ರಚನೆಗೆಇರುವ ನಿಯಮಗಳ ಬಗ್ಗೆ ಸವಿವರವಾಗಿ ತಿಳಿಸಿ ಕೊಡುವ ಹೊಸ ಅಂಕಣವೇ ‘ಗಝಲ್ ಲೋಕ’ ಪ್ರತಿ ಬುದವಾರಮತ್ತು ಶನಿವಾರ ನಮ್ಮ ನಡುವಿನಕವಿ ಬಸವರಾಜ್ ಕಾಸೆ ಅವರ ಲೇಖನಿಯಿಂದ

ಗಝಲ್ ಲೋಕ Read Post »

ಕಾವ್ಯಯಾನ

ಕಾವ್ಯಯಾನ

ಒಂದು ಕವಿತೆ ಅಮೃತಾ ಮೆಹಂದಳೆ ಈಗ ನಿನ್ನ ವಿರಾಮ ಸಮಯವಲ್ಲವೇ? ಬಿಡುವಿನಲ್ಲಿ ನೆನೆಯುತ್ತಿರುವೆಯಾ ನನ್ನ ನೀನು? ಲಟಿಗೆ ಮುರಿದ ಬೆರಳು ಸ್ಪರ್ಶಕ್ಕಾಗಿ ಹಂಬಲಿಸಿರಬಹುದೇನು? ಚಾಚಿದ ಕಾಲು ಬಯಸಿತಾ ಸಹನಡಿಗೆಯನ್ನು? ಏನೋ ಹುಡುಕುವ ಕ್ಯಾಮರಾ ಕಣ್ಣು ನನ್ನದೇ ಚಿತ್ರ ಸೆರೆಹಿಡಿಯುತ್ತಿದೆಯೇನು? ತುಟಿಸೋಕಿ ಸುಟ್ಟ ಕಹಿಕಾಫಿ ನಿನ್ನ ಪಾಲಿನ ನಾನಲ್ಲವೇನು? ನನ್ನ ಪ್ರೀತಿಯ ಹಾಡು ನಿನ್ನ ಪಾಡಾಗಿ ಕಿವಿಯ ಸೋಕುತ್ತಿರಬಹುದೇನು? ಇಲ್ಲಿ ಬೀಸಿದ ಗಾಳಿ ಸುತ್ತಿ ಸುಳಿದು ನಿನ್ನಾತ್ಮವ ಪುಳಕಿಸಬಾರದಿತ್ತೇನು? ನನ್ನ ಕಣ್ಣು ಕತ್ತಲು ಕಪ್ಪುಪಟ್ಟಿ ಕಟ್ಟದೆಯೇ.. ಕಿವಿ ಮುಚ್ಚಿಹೋಗಿದೆ ಧ್ವನಿ ತಲುಪಲಾಗದೆಯೇ.. ನಾಲಿಗೆ ಸೀಳಿದೆ ಮತ್ತೆಂದೂ ಹೊಲಿಯಲಾಗದೆಯೇ.. ಅವಯವಗಳೇ ಸುಟ್ಟುಹೋಗಿದೆ ಭಾವ ಚಿಗುರಲಾಗದೆಯೇ.. ನಾನೇ ಹೂತುಹೋಗಿರುವೆ ಅಸ್ತಿತ್ವವಿಲ್ಲದೆಯೇ.. ಮಾತೇ ಇಲ್ಲದ ಮೌನದಾಯುಧಗಳು ಸೋತು ಎರಡೂ ಕಡೆ.. ಮನಸು ಜಾರಿ ಹೃದಯದೆಡೆ..ಕದನವಿರಾಮ ಜಾರಿಯಾಗಬಾರದೇ? **********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನದಿಯಾಗು. ಶಾಲಿನಿ ಆರ್. ಶಾಲಿನಿ ಆರ್. ಆಸೆಗಳಿವೆ ನೂರಾರು ನೂರಾರು ಬಯಕೆ, ಎತ್ತಲಿಂದೆತ್ತಣಕೂ ನಿನ್ನ ಸೇರುವ ಹರಕೆ, ಹಸಿರುಲ್ಲಿನ ನಡುವೆ ಇಬ್ಬನಿ ಬನಿಯೊಳಗೆ ನಾನಿದಿದ್ದರೆ, ನಿನ್ನ ಪಾದ ಪ್ರಾತಃ ಸ್ಪರ್ಶಕೆ ನಾ ಸದಾ ಕಚಗುಳಿಯಿಡುತಿದ್ದೆ, ನಿನ್ನ ನೋಡುವ ಕನ್ನಡಿ ನಾನಾಗಿರೆ, ನಿನ್ನಂತರಂಗನರಿವ ಬೆರಗು ನಾನಾಗಿ ಬಳಿಯಿರುತಿದ್ದೆ, ನೀ ನಡೆವ ಹಾದಿಗೆ ಮರವು ನಾನಾದೊಡೆ, ನಿನ್ನ ದಣಿವಿಗೆ ನಾ ನೆರಳಾಗ ಬಯಸಿದ್ದೆ, ನೀ ನೋಡುವ ನೋಟದ ಕಣ್ಣು ನಾನಗಿದ್ದರೆ, ಭರವಸೆಯ ಬೆಳದಿಂಗಳ ಕಣ್ಗಿರಿಸಿ ತಣಿಯುತಿದ್ದೆ, ನಿನ್ನ ನಿಜ ಪ್ರೀತಿ ನಾನಾಗಿ ಹೃದಯಮಿಡಿವಂತಿದಿದ್ದರೆ, ಪ್ರತಿಬಡಿತದ ದನಿಗೆ ನಾ ಮೈ ಮರೆಯುತಿದ್ದೆ, ಆಸೆಗಳ ದಟ್ಟ ಕಾನನದಲಿ ಹೀಗೆ ನಡೆದು ಹೋಗಬೇಕು, ಘನಿಕರಿಸಿದೆಲ್ಲ ಅಮಲು ಭಾವಗಳಲಿ ಸುರಿದು ನದಿಯಾಗಬೇಕು. ********

ಕಾವ್ಯಯಾನ Read Post »

ಅನುವಾದ

ಅನುವಾದ ಸಂಗಾತಿ

“ನಿಮ್ಮ ಕೈಗಳು ಮೂಲ: ಬಾಬುರಾವ್ ಬಾಗುಲ್(ಮರಾಠಿಕವಿ) ಕನ್ನಡಕ್ಕೆ:ಕಮಲಾಕರ ಕಡವೆ ನಿಮ್ಮ ಕೈಗಳು ಇದ್ದಿರಬಹುದು ಬಂಧಿಆದರೆ ಅವು ಸೃಜನಶೀಲನಿಮ್ಮ ಕೈಗಳು ಇದ್ದಿರಬಹುದು ಶಾಂತ, ಅಮಾಯಕಆದರೆ ಅವು ಪರಿವರ್ತನೆಯ ರಥಗಳುಪ್ರಗತಿಯ ಹೆದ್ದಾರಿಗಳುನಿಮ್ಮ ಐದು ಬೆರಳುಗಳು ಪಂಚಮಹಾಭೂತಗಳುಇದೇನು ಬಾ. ಬಾ. ನ ಕಲ್ಪನೆಯಲ್ಲರಶಿಯಾ, ಅಮೇರಿಕ, ಯುರೋಪು ಆಗಿದ್ದಾರೆ ಸಾಕ್ಷಿನಿಮ್ಮ ಖಚಿತ ಸಾಮರ್ಥ್ಯಕ್ಕೆ ********

ಅನುವಾದ ಸಂಗಾತಿ Read Post »

ಕವಿತೆ ಕಾರ್ನರ್

ಕವಿತೆ ಕಾರ್ನರ್

ಚಹರೆ ನನ್ನ ಅವಳ ಸಂಬಂದಮುರಿದುಬಿದ್ದುಮುವತ್ತು ವರುಷಗಳಾದರೂ ನಮ್ಮ ವಿದಾಯದ ಕ್ಷಣಗಳ ಕ್ಷಣಗಳ ಸಾಕ್ಷಿಗಳಿನ್ನೂಹಾಗೇ ಉಳಿದಿವೆ ರಪ್ಪನೆ ಬಾಗಿಲು ತೆಗೆದು ಸದ್ದು ಮಾಡುತ್ತಾ ಹೋದವಳುಎಸೆದು ಹೋದ ಮುಖ ಕನ್ನಡಿಯ ಚೂರುಗಳಲ್ಲಿನ್ನುಅವಳ ಚಹರೆಗಳು ಕಾಣುತ್ತಿವೆ! ಮತ್ತೆಂದೂ ನೋಡಲಾರೆ ನಿನ್ನ ಮುಖವ ಎಂದು ಕೂಗಿ ಹೇಳಿ ಹೋದವಳಮಾತುಗಳಿನ್ನೂ ಹಳೆಯ ಮಣ್ಣಿನ ಗೋಡೆಗಪ್ಪಳಿಸಿಮತ್ತೆ ಮತ್ತೆ ಕೇಳುತ್ತಲೇ ಇವೆ! ನನ್ನ ಅವಳ ಸಂಬಂದಮುರಿದುಬಿದ್ದುಮುವತ್ತು ವರುಷಗಳಾದರೂ ಕೇಳಿಸುತ್ತಲೇ ಇವೆ ಶಬ್ದಗಳುಕಾಣಿಸುತ್ತಲೇ ಇವೆ ಚಿತ್ರಗಳು ಒದ್ದೆಯಾಗುತ್ತಲೇ ಇವೆ ಕಣ್ಣುಗಳು!ಕಾರಣವಿರದೇ? ********* ಕು.ಸ.ಮದುಸೂದನ

ಕವಿತೆ ಕಾರ್ನರ್ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಬಸವರಾಜ ಕಾಸೆ ಹೊತ್ತಲ್ಲದ ಹೊತ್ತಲ್ಲಿ ಪದೇ ಪದೇ ಗುನುಗುನಿಸುವ ಹಾಡೊಂದು ನೀನು/ ತನ್ನಷ್ಟಕ್ಕೇ ತಾ ಪುಟಿದೇಳುವ ಉತ್ಸಾಹಕ್ಕೆ ಗೊತ್ತಿರದ ಸ್ಪೂರ್ತಿಯೊಂದು ನೀನು// ಆ ರೆಪ್ಪೆ ಮಿಟುಕಿದಷ್ಟು ಬಾರಿ ಕ್ಷಣಕ್ಕೊಮ್ಮೆ ಕಾಣೆಯಾಗಿ ವಾಪಸ್ಸಾಗುವ ನಾನು/ ಮೆದು ಕುಣಿತದ ಕಣ್ಣ ಹುಬ್ಬು ಹುಟ್ಟು ಹಾಕುವ ಅನುಭವವೊಂದು ನೀನು// ಸರಸರನೆ ಸೆಳೆದೆಳೆದು ಸಾಗರ ಒಳಗೆಳೆದುಕೊಂಡಂತೆ ಸಂಜೆ ಸೂರ್ಯನನ್ನು/ ಮರಳು ದಡದ ಮೇಲೆ ಮೆಲ್ಲಗೆ ಮೆಲುಕುವ ಮಲ್ಲಿಗೆ ದಂಡೆಯೊಂದು ನೀನು// ನೀ ಬರುವ ಸಮಯಕ್ಕೆ ಕಾಯುವ ಭಾವಗಳು ಹರಿಯುವವು ಮಳೆಗಾಲದ ಹೊಳೆಯಾಗಿ/ ಹೋಗಿ ಮೈಯೊಡ್ಡಿ ನೆನೆಯುವ ಗುಂಗಿಗೆ ರಂಗೇರಿಸುವ ಮಳೆಬಿಲ್ಲೊಂದು ನೀನು// ಕಂಡು ಹಿಡಿಯಬೇಕು ಹೊಸ ಸೂತ್ರ ನೀ ಕೊಟ್ಟ ಕನಸುಗಳ ಕಚಗುಳಿ ಲೆಕ್ಕ ಹಾಕಲು/ ಆ ಮೂಗಿನ ನತ್ತು ಪ್ರತಿ ರಾತ್ರಿಗಳ ಮತ್ತು ಜೀವ ತಳೆಯುವ ಜಾಗರಣೆಯೊಂದು ನೀನು// ಮಟಮಟ ಮಧ್ಯಾಹ್ನ ಕಪ್ಪು ಬಿಳಿ ಮೋಡಗಳ ಪಯಣ ಧರೆಗಿಳಿಯಲು ಅನುರಾಗ/ ಕಳೆದೋಗುವ ಮುನ್ನ ವ್ಯರ್ಥವಾಗಿ ಚಳಿಗಾಲ ಹಿಡಿದಪ್ಪಿದ ಎಳೆಬಿಸಿಲೊಂದು ನೀನು// ಇಲ್ಲದೊಂದು ಕವಿತೆಯದು ಕಾಡುವಂತಹ ಒನಪು ಹೊದ್ದುಕೊಂಡು ಬಿಸುಪು/ ಸುಮ್ಮಸುಮ್ಮ ನಗುವ ಸದ್ದಿರದ ಸಂಗತಿಗಳಿಗೆ ಸುದ್ದಿಯಾಗುವ ನೆಪವೊಂದು ನೀನು// ********

ಕಾವ್ಯಯಾನ Read Post »

You cannot copy content of this page

Scroll to Top