ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಮೊಗ್ಗುಗಳು ತುಟಿ ಬಿಚ್ಚೆ ಕೆ.ಸುಜಾತ ಗುಪ್ತ ನಾ ಪ್ರಕೃತಿ ಪ್ರೇಮಿಯಾಗಿ ಸೂಕ್ಷ್ಮವಾಗಿ ಗಮನಿಸೆ ಪ್ರಕೃತಿಯ ಸೊಬಗು ನೂರ್ಮಡಿ ಹೆಚ್ಚಿತ್ತು… ಭಾವುಕತೆಯಲಿ ಪ್ರಕೃತಿಯ ಮಡಿಲಲ್ಲಿ ಕುಳಿತು ನನ್ನ ನಾ ಮರೆತು ಲಲ್ಲಗೆರೆಯಲು ಹರುಷದಿ ಸ್ಪಂದಿಸಿ ನಸು ನಕ್ಕಿತ್ತು ಪ್ರಕೃತಿ.. ಬಿರಿದು ಪರಿಮಳವ ಸೂಸಲು ರವಿ ಕಿರಣದ ಸ್ಪರ್ಶದ ನಿರೀಕ್ಷೆಯಲ್ಲಿರಲು ಮೊಗ್ಗುಗಳು, ಮಂಜಿನ ಮುಂಜಾನೆಯಲಿ ಭೂದರನ ಮರೆಯಲಿ ರಾಜೀವ ಸಖ ಇಣುಕೆ, ಸಜ್ಜಾಗಿ ನಿಂತು ವಯ್ಯಾರದೆ ಅವನೆಡೆಗೆ ಓರೆನೋಟ ಬೀರಿದ ಮೊಗ್ಗುಗಳು ನಸು ನಾಚಿ ತುಟಿ ಬಿಚ್ಚಿ ಲಯಬದ್ದವಾಗಿ …ಹಾಯ್ …ಎಂದಾಗ, ಹರುಷದೆ ರವಿ ಅಪ್ಪಿ ಮುತ್ತಿಡಲು ರವಿ ಕರಗಳ ಆಲಿಂಗನದಿ ಬಿರಿಯುತ್ತಿದ್ದ ಮೊಗ್ಗುಗಳು ಪ್ರೇಮ ಕಾವ್ಯಕೆ ಮುನ್ನುಡಿಯ ಬರೆಯುವಂತೆ ಭಾಸವಾಯ್ತು.

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಮಾಡು ನೀ ಪ್ರಯತ್ನ ಪ್ಯಾರಿಸುತ ಯತ್ನ,ಯತ್ನ ಮಾಡು,ಮಾಡು ನಿನ್ನ ಪ್ರಯತ್ನ ಆಗಲೇ ನನಸಾಗಿಸುವುದು ಆ ನಿನ್ನ ಸಪ್ನ ರಾತ್ರಿ ಕಂಡ ಕನಸುಗಳೆಲ್ಲ ಕನಸುಗಳೇ ಅಲ್ಲ ಮಲಗಲಾವುದು ಬಿಡೋದಿಲ್ಲವಲ್ಲ ಅದುವೇ ನಿನ್ನ ಸಪ್ನ, ಮಾಡು ನೀ ಪ್ರಯತ್ನ ಒಳ್ಳೆ ಬದುಕು ಕಾಣಲು ವಿದ್ಯೆಯೊಂದು ಸಾಲದು ಒಂದೇ ಗುರಿಯ ನಿಗದಿಸಿ ಯತ್ನ ಮಾಡು ಸಿಗುವುದು ಕಾಲ ತುಂಬಾ ಓಡುವದು ನೀನು ಯಾಕೆ ನಿಲ್ಲುವದು ಗುರಿಯ ಕಡೆ ಓಡುತಿರೇ ಸಾಧನಾಶಿಖರವೇ ನಿನ್ನದು ಬಡವ ಬಲ್ಲವ ಎಲ್ಲ ಒಂದೇ ಗುರಿಯನ್ನು ಸಾಧಿಸಲು ಕುಂಟು ನೆಪವು ಹೇಳಿದರೆ ಆಗದು ಉಚ್ಛವಾಗಿ ಬದುಕಲು ಪಡೆದು ಬಂದ ಜನುಮ ಗುರುತಾಗಿಯೇ ಉಳಿಸಲು ಹಗಲಿರುಳು ಯತ್ನಿಸು ಜಯದ ಡಮರುಗ ಬಡಿಯಲು ಗೆದ್ದು ಬಂದ ಸಾಧಕರೆಲ್ಲ ಅದೃಷ್ಟ ಮಾಡಿ ಗೆದ್ದವರಲ್ಲ ಇಟ್ಟ ಗುರಿಯನು ಆಗದೆಂದು ಬಿಟ್ಟವರಲ್ಲ ಸುಲಭವಾಗಿ ಗೆದ್ದರೆ ಸಾಧನೆಯಾಗೋದಿಲ್ಲ ಗೌರವಯುತ ಸನ್ಮಾನ ಬಿಟ್ಟಿಯಾಗಿ ಸಿಗೋದಿಲ್ಲ *******************************

ಕಾವ್ಯಯಾನ Read Post »

ಇತರೆ

ಲಂಕೇಶರನ್ನು ಏಕೆ ಓದಬೇಕು?

ಲಂಕೇಶರನ್ನು ಏಕೆ ಓದಬೇಕು? ಸುಪ್ರಿಯಾ ನಟರಾಜ್ ನಾನೇಕೆ ಲಂಕೇಶರನ್ನು ಓದುತ್ತೇನೆ ಪಿಯುಸಿ ಯಿಂದಲೂ ವಿಜ್ಞಾನದ ವಿದ್ಯಾರ್ಥಿಯಾಗಿದ್ದ ನನಗೆ, ಕನ್ನಡ ಸಾಹಿತ್ಯದಲ್ಲಿ ಅಪಾರವಾದ ಆಸಕ್ತಿ ಇತ್ತು. ಆದರೆ, ಪುಸ್ತಕಗಳನ್ನು ಸಂಗ್ರಹಿಸುವುದು ನನ್ನ ಹವ್ಯಾಸವಾಗಿತ್ತೇ ಹೊರತು, ಓದುವುದು ನನ್ನಿಂದ ಸಾಧ್ಯವಾಗುತ್ತಿರಲಿಲ್ಲ. ನನಗೆ ಪುಸ್ತಕಗಳ ಮೇಲೆ ಪ್ರೀತಿ ಇತ್ತು. ಆದರೆ ಅವುಗಳನ್ನು ಓದುವ ಚಟವಿರಲಿಲ್ಲ.  ಆದರೂ ಕನ್ನಡ ಸಾಹಿತ್ಯವನ್ನು ಅಧ್ಯಯನ ಮಾಡುವುದು ನನ್ನ ಆಸ್ಥೆಯಾಗಿದ್ದರಿಂದ ಕನ್ನಡ ರತ್ನ ಪರೀಕ್ಷೆ ಯಲ್ಲಿ ಉತ್ತೀರ್ಣಳಾಗಿ, ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿರುವಾಗ, ನನ್ನ ಸಂಗ್ರಹದಲ್ಲಿ ಹಲವಾರು ವರ್ಷಗಳಿಂದ ಬೆಚ್ಚಗೆ ಕುಳಿತಿದ್ದ ಮಲೆಗಳ ಮದುಮಗಳನ್ನು, ಮೂಕಜ್ಜಿಯನ್ನು ಭೇಟಿಯಾದ ಮೇಲೆ ನನ್ನಲ್ಲಿದ್ದ ‘ಓದುಗ’ ಪ್ರಜ್ಞೆ ಜಾಗೃತವಾಯಿತು. ಈ ಪ್ರಜ್ಞೆ, ನನ್ನಿಂದ ಕುವೆಂಪು, ಶಿವರಾಮ ಕಾರಂತ, ಕೆ.ಪಿ ಪೂರ್ಣಚಂದ್ರ ತೇಜಸ್ವಿ, ಯು.ಆರ್ ಅನಂತಮೂರ್ತಿ, ಎಸ್.ಎಲ್.ಭೈರಪ್ಪ, ಪಿ.ಲಂಕೇಶ್ ಅವರ ಪರಿಚಯ ಮಾಡಿಸಿ, ಸಾಹಿತ್ಯದ ರೂಪುರೇಷೆಗಳನ್ನು ಮನಸ್ಸಿನಲ್ಲಿ ಮೂಡಿಸಿತು. ನನಗೆ ಪಿ.ಲಂಕೇಶ್ ಅವರ ಪರಿಚಯ ವಾಗಿದ್ದು ಅವರ ಅವ್ವ ಎಂಬ ಕಾವ್ಯದಿಂದ. ಈ ಕವನದಲ್ಲಿ ಲಂಕೇಶರು, ಕೃಷಿ ಸಂಸ್ಕೃತಿಯ ತಾಯಿ ಮತ್ತು ಮಗುವಿನ ಸಂಬಂಧವನ್ನು ರೂಪಕವಾಗಿ ವರ್ಣಿಸಿದ್ದಾರೆ. ಲಂಕೇಶರ ಅವ್ವ ನಮ್ಮ ನಾಡಿನ  ಸಾವಿರಾರು ಹೆಣ್ಣುಮಕ್ಕಳಂತೆ ಮಣ್ಣಿನ ಮಗಳು. ಅವಳ ಉರುಟು ಬದುಕಿನಂತೆ, ಇಲ್ಲಿ ಬಳಸಿದ ಭಾಷೆಯೂ ಉರುಟು. ಲಂಕೇಶರು ತಮ್ಮ ತಾಯಿಗೆ ಕೊಡುವ ಹೋಲಿಕೆಗಳಂತೂ ಓದುಗನನ್ನು ದಿಗ್ಭ್ರಾಂತಿಸುತ್ತದೆ. ಅವಳ ಕಪ್ಪು ನೆಲಸತ್ವ, ಬನದ ಕರಡಿ, ನೊಂದ ನಾಯಿ, ಪೇಚಾಡುವ ಕೋತಿಯ ಗುಣಗಳು, ಹೆಣ್ಣುಮಗಳೊಬ್ಬಳ ಒಂಟಿ ಹೋರಾಟದ ಬದುಕಿನ ಅನಿವಾರ್ಯ ಲಕ್ಷಣಗಳು. ನನಗೆ ಈ ಕವಿತೆ, ‘ಹೊತ್ತುಹೊತ್ತಿಗೆ ತುತ್ತನಿಟ್ಟು ಸಲುಹಿದಾಕೆ, ನಿನಗೆ ಬೇರೆ ಹೆಸರು ಬೇಕೇ, ಸ್ತ್ರೀ ಎಂದರೆ ಅಷ್ಟೇ ಸಾಕೇ’  ಎಂಬ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಅವರ ಸಾಲುಗಳನ್ನು ನೆನಪಿಸಿತು. ಲಂಕೇಶರು, ತಮ್ಮ ತಾಯಿಯನ್ನು ಕೃತಕವಾಗಿ ಹೊಗಳದೇ ಅಭಿನಂದಿಸಿದ್ದಾರೆ. ನೀರಿನಲ್ಲಿ ಹಿಟ್ಟನ್ನು ಕಲಿಸಿ, ಹದಮಾಡಿ, ತಟ್ಟುತ್ತಾ ಹೋದಂತೆ ಸಿದ್ಧವಾಗುವ ರೊಟ್ಟಿ ತಯಾರಿಸುವುದು ಎಲ್ಲರಿಗೂ ಸಿದ್ಧಿಸುವಂತದಲ್ಲ. ಆದರೆ ಲಂಕೇಶರು ತಟ್ಟಿರುವ ರೊಟ್ಟಿ,ವಿಭಿನ್ನ.  ಈ ಮಹತ್ವದ ಕತೆ, ಮನುಷ್ಯನ ಸೂಕ್ಷ್ಮ ಸಂವೇದನೆಗಳನ್ನು ಪ್ರತಿಬಿಂಬಿಸುವ ಕನ್ನಡಿಯಾಗಿದೆ. ರೊಟ್ಟಿಯಲ್ಲಿ ರೈತನ ದುಡಿಮೆ,ಪರಿಶ್ರಮ, ಅಮ್ಮನ ಪ್ರೀತಿ ಇದೆ. ಹಸಿದವರ ಒಡಲನ್ನು ತಣಿಸುವ ಗುಣ ಇದೆ. ಆದರೆ, ಲಂಕೇಶರ ರೊಟ್ಟಿಯಲ್ಲಿ, ಹರಕು ಬಟ್ಟೆಯ ಹಸಿದ ವ್ಯಕ್ತಿ, ವಿಚಿತ್ರ ವ್ಯಕ್ತಿತ್ವದ ಹೆಣ್ಣು, ಪೊಲೀಸ್ ಅವ್ಯವಸ್ಥೆ, ಹಸಿವು, ಭಯ, ಕೋಪ, ಅಸಹಾಯಕತೆಯ ಅಂಶಗಳು ಕಾಣಸಿಗುತ್ತದೆ. ಇನ್ನು ಲಂಕೇಶರನ್ನು ಭೇಟಿಮಾಡಲು ನನಗೆ ಸಿಕ್ಕ ಮತ್ತೊಂದು ಕೊಂಡಿ, ‘ಸಂಕ್ರಾಂತಿ’ ನಾಟಕ. ‘ಕ್ರಾಂತಿ’ ಎಂದರೆ ಸುಗ್ಗಿಯ ಸಂಭ್ರಮ. ಸೂರ್ಯ ತನ್ನ ಪಥವನ್ನು ಬದಲಾಯಿಸುವ ದಿನ. ಅಂತಹ ದಿನದಂದು, ಒಂದು ಸಾಮಾಜಿಕ ವಿನ್ಯಾಸದಲ್ಲಿ, ಅದೂ ದಲಿತರ ಕೇರಿಯಲ್ಲಿ, ಕಾಣುವ ವಿಚಿತ್ರ ತಿರುವು ಈ ನಾಟಕದಲ್ಲಿ ಚಿತ್ರಣಗೊಂಡಿದೆ. ಬೇರೆ ಎಲ್ಲಾ ಲೇಖಕರು ತಮ್ಮನಾಟಕಗಳಲ್ಲಿ ಕ್ರಾಂತಿಯ ಸಾಧ್ಯತೆ ಹೇಳಿದ್ದರೆ, ಲಂಕೇಶರು ಇಲ್ಲಿ ‘some ಕ್ರಾಂತಿ’ಯನ್ನುಂಟು ಮಾಡಿದ್ದಾರೆ. ಹನ್ನೆರಡನೇ ಶತಮಾನದ ಬಸವಣ್ಣನ ನೇತೃತ್ವದ ವಚನಕಾರರ ಚಳವಳಿ ಸಮಾಜದಲ್ಲಿ ನಿಜವಾಗಲೂ ಬದಲಾವಣೆ ತಂದಿತ್ತೇ? ತಂದಿದೆಯೇ? ಎಂಬ ಪ್ರಶ್ನೆಯನ್ನು ಹುಟ್ಟುಹಾಕಿ, ಸಮಾಜದ ಬದಲಾವಣೆ ಸಂಕೀರ್ಣ ಎಂಬ ಕಹಿ ಸತ್ಯವನ್ನು ಕಕ್ಕುತ್ತದೆ. ಈ ನಾಟಕವನ್ನು ಹರಳಯ್ಯ ಮಧುವರಸರ ಪ್ರಕರಣದಿಂದ  ಸ್ಪೂರ್ತಿ ಹೊಂದಿರುವುದಾಗಿ ಸ್ವತಃ  ಲಂಕೇಶರೇ ಹೇಳಿದ್ದಾರೆ. ‘ಜಾತಿ ಎಂಬ ಸೂತಕ’ ಎಂಬಂತ ಈ ನಾಟಕಕ್ಕೆ ಸಂವಾದಿಯಾಗಿ ‘ಮುಟ್ಟಿಸಿಕೊಂಡವನು’ ಎಂಬ ಇವರದೇ ಮತ್ತೊಂದು ಕತೆಯನ್ನು ಗಮನಿಸಬಹುದು. ಬಸಲಿಂಗನ ಇಲ್ಲಿನ ಜಾತಿ ಧರ್ಮಗಳ ಇಕ್ಕಟ್ಟಿನ ಸ್ಥಿತಿ, ಅಂಧ ಅನಿಸಿಕೆಗಳು, ಈಗಿನ ತಲೆಮಾರಿಗೂ ದಾಟಿಸಿದೆ, ದಾಟಿಸುತ್ತಿದೆ. ಜಾತಿ ಪದ್ಧತಿಯಿಂದ ಕಲುಷಿತಗೊಂಡ ಸಮಾಜ ಸುಧಾರಿಸುವುದು,ಮನುಷ್ಯ ಬಸಲಿಂಗನಂತೆ ಮುಗ್ಧತೆಯಿಂದ ಬದಲಾಗಿ ಜಾತಿ ಎಂಬುದನ್ನು ಧಿಕ್ಕರಿಸಿದಾಗ…ಈ ಕತೆಯನ್ನು ಓದುತ್ತಿರುವಾಗ ನನಗೆ ಯು.ಆರ್. ಅನಂತಮೂರ್ತಿಯವರ ‘ಸಂಸ್ಕಾರ’ ಕಾದಂಬರಿಯಲ್ಲಿ ಬರುವ ಪಾತ್ರಧಾರಿಯೊಂದು, ತನ್ನ ಮಡಿ ಬಿಟ್ಟು, ಗುಟ್ಟಾಗಿ ಮತ್ತೊಬ್ಬರ ಮನೆಯಲ್ಲಿ ಉಪ್ಪಿಟ್ಟು, ಅವಲಕ್ಕಿ ತಿಂದ ಪ್ರಸಂಗ ನೆನಪಾಯಿತು. ನನ್ನ ಪ್ರಕಾರ ಲಂಕೇಶರು, ವ್ಯಕ್ತಿಯೊಬ್ಬ ಹೇಗೆ ಬದುಕಬಲ್ಲ ಆದರೆ ಹೇಗೆ ಬದುಕುತ್ತಿದ್ದಾನೆ  ಎಂಬುದನ್ನು ತಮ್ಮ ಕಾದಂಬರಿಗಳಲ್ಲಿ,ಕತೆಗಳಲ್ಲಿ, ನಾಟಕಗಳಲ್ಲಿ ಹೇಳುತ್ತಾರೆ.ಇವರ ಕಾದಂಬರಿಗಳು ನನ್ನನ್ನು ಸಕ್ರಿಯವಾಗಿ ಓದಿಸಿಕೊಂಡು ಮತ್ತೊಂದು ಲೋಕಕ್ಕೆ ಕರೆದೊಯ್ಯುತ್ತದೆ. ಸಾಮಾನ್ಯವಾಗಿ ನಾ ಕಂಡ ಲಂಕೇಶರು, ದಲಿತ ಲೇಖಕರು ಗ್ರಹಿಸಿರುವುದಕ್ಕಿಂತಲೂ ಹೆಚ್ಚು ಸೂಕ್ಷ್ಮವಾಗಿ ದಲಿತ ಪ್ರಜ್ಞೆಯನ್ನು ಗಮನಿಸುತ್ತಾರೆ. ಆದ್ದರಿಂದ ನನಗೆ ಲಂಕೇಶರನ್ನು ಓದಬೇಕು, ಮತ್ತಷ್ಟು ಓದಬೇಕು ಎಂದೆನಿಸುತ್ತದೆ *********

ಲಂಕೇಶರನ್ನು ಏಕೆ ಓದಬೇಕು? Read Post »

ಕಾವ್ಯಯಾನ

ಕಾವ್ಯಯಾನ

 ವಿಭಿನ್ನ ರೇಶ್ಮಾ ಗುಳೇದಗುಡ್ಡಾಕರ್ ಕೋಟೆ ಕಟ್ಟುವೆ ಭಾವನೆಗಳ ನಡುವೆಎಂದವ ಹೆಣವಾಗಿ ಬಿದ್ದನುಒಡೆದ ಕನಸುಗಳ ಅವಶೇಗಳಮಧ್ಯೆ …. ಮಾನವತೆಯ ಹರಿಕಾರನೋಂದಮನಗಳ ಗುರಿಕಾರ ಎಂದುನಕಲಿ ಫೋಸು ಕೊಟ್ಟವನುಎಡಬಿಡದೆ ಭಾಷಣಗಳಸುರಿಮಳೆಗೈದವನು ಬಹಳ ದಿನಬಾಳಿಕೆ ಬರಲಿಲ್ಲ ಸತ್ಯಗಳ ಮುಂದೆ …. ಮಾತಿನಲ್ಲೆ ಬಂದೂಕು ಇಟ್ಟವನುಮುಗ್ದ ಮಂದಿಯ ಚಿತ್ತ ಕದಲಿದನುಅನಾಯಾಸವಾಗಿ ಗೆಲುವು ಪಡೆಯಲುನಿರಂತರವಾಗಿ ಹೆಣಗುತಿರುವನುಗುಂಪುಗಳ ನಡುವೆ …. ಹಿಡಿ ಮಣ್ಣಿಗೆ ಸಾರವ ಪರೀಕ್ಷಿಸುವವರುಬದುಕಿನ ಸಾರವ ಹೊತಿಟ್ಟುಮುಖವಾಡಗಳಿಗೆ ಬಣ್ಣ ಹಚ್ಚುವರು ಸರಳತೆಯೇ ಉಸಿರು ಎಂದುಆದರ್ಶಗಳೇ ಬದುಕು ಎಂದುಅಹಿಂಸೆಯೇ ದೇವರೆಂದವರುಇಂದು ಎಂದೆಂದು “ಮಹಾತ್ಮ “ನೇ ಅಗಿರುವರು …… *******

ಕಾವ್ಯಯಾನ Read Post »

ಇತರೆ

ಲಂಕೇಶರನ್ನು ಏಕೆ ಓದಬೇಕು?

ಲಂಕೇಶರನ್ನು ಏಕೆ ಓದಬೇಕು? ನವೀನ್ ಮಂಡಗದ್ದೆ ಲಂಕೇಶ್ ಅವರನ್ನು ನಾನೇಕೆ ಓದುತ್ತೇನೆ.. ಲಂಕೇಶ್ ನನ್ನ ಹಾಗೆ ದಮನಿತ, ಅನಕ್ಷರಸ್ಥ, ಗ್ರಾಮೀಣ ಪ್ರದೇಶದಿಂದ ಬಂದವರು, …ಇಷ್ಟೆಲ್ಲ ಮಿತಿಗಳಿದ್ದಾಗಲೂ ಅವರು ಸಾಹಿತ್ಯ, ಸಿನಿಮಾ, ಪತ್ರಿಕೆ ಎಂದೆಲ್ಲ ಕೆಲಸ ಮಾಡಿದರು.. ಈ ಹಿನ್ನೆಲೆಯಲ್ಲಿ ನಮಗೀಗ ಕೆಲಸ‌ ಮಾಡಲು ಸಾಕಷ್ಟು ‘ ಸ್ಪೇಸ್’ ಇದೆ ಹಾಗಾಗಿ ಲಂಕೇಶ್ ನನಗೆ ಸ್ಪೂರ್ತಿ.. ಗ್ರಾಮೀಣ ಪ್ರದೇಶಗಳಿಂದ ನಗರ ಕಡೆಗೆ ಮುಖ ಮಾಡುವ ಯುವಕರು ಅಲ್ಲಿನ ಹುಸಿವೈಭವಕ್ಕೆ ಮಾರು ಹೋಗಿ ನಗರಗಳಲ್ಲಿ ಉಳಿದು ಬಿಡುತ್ತಾರೆ.. ಲಂಕೇಶ್ ನಗರದ ಕಡೆ ಮುಖ ಮಾಡಿದರೂ ತನ್ನ ಹಳ್ಳಿಯನ್ನು ಮರೆಯಲಿಲ್ಲ, ಅವರೊಬ್ಬ ಅಕ್ಷರಸ್ತ ವ್ಯಕ್ತಿಯಾಗಿ ಅನಕ್ಷರಸ್ಥ ಸಮುದಾಯದ ಜೊತೆ ನಿಂತರು  ಅವರ ಊರಾದ ಕೊನಗವಳ್ಳಿಯಲ್ಲಿ ಕೌದಿಗಳನ್ನು ಹೊಲಿಸಿ ಬೆಂಗಳೂರಿನಲ್ಲಿ ತೆಗೆದುಕೊಂಡು ಹೋಗಿ ಮಾರಿ ಅದರ ಹಣವನ್ನು ಕೌದಿ ನೇಯ್ದವರಿಗೆ ತಂದುಕೊಡುತ್ತಿದ್ದರಂತೆ ಸಾಹಿತ್ಯ ಕಲಿಸುವ ಬದ್ದತೆ ಏನು ಅದರ ಪ್ರತಿಫಲ ಏನಾಗಿರಬೇಕು ಎಂಬುದಕ್ಕೆ ಸ್ಪಷ್ಟ ಉದಾಹರಣೆ ಲಂಕೇಶ್. ಜಾತಿ ವ್ಯವಸ್ಥೆಯಿಂದ ನಿಯಂತ್ರಿಸಲ್ಪಡುವವರು ಓದಲೇಬೇಕಾದ ಕತೆ ಮುಟ್ಟಿಸಿಕೊಂಡವನು, ನನ್ನ ಎಚ್ಚರದ ಧ್ವನಿಯಾಗಿ ಆ ಕತೆಯನ್ನು ಓದುತ್ತೇನೆ. ಬಿರುಕು ಕಾದಂಬರಿಯ ಬಸವರಾಜನ ಪಾತ್ರ ನನ್ನನ್ನು ಕಾಡುತ್ತಿರುತ್ತದೆ. ಅದರಲ್ಲಿ ಅವನು ಆಗಾಗ ತನ್ನ ಅಂಗಿಯನ್ನು ಬದಲಿಸುತ್ತಾನೆ, ಅದು ವ್ಯಕ್ತಿತ್ವ ಬದಲಾವಣೆಯ ಸಂಕೇತ, ಆಧುನಿಕೋತ್ತರ ಕಾಲದಲ್ಲು ಇದು ಸಹಜವಾಗಿ ರೂಪುಗೊಂಡಂತೆ ಇದೆಯಲ್ಲ ಅನಿಸುವ ಕಾರಣಕ್ಕಾಗಿ ಆ ಕಾದಂಬರಿಯನ್ನು ಮತ್ತೆ ಮತ್ತೆ ಓದುತ್ತೇನೆ, ಒಟ್ಟಾರೆ ಲಂಕೇಶ್ ಅನುಭವಿಸಿದಷ್ಟು ಕಷ್ಟಗಳನ್ನು ಅನುಭವಿಸದ ನಾವು ಅವರನ್ನು ಸ್ಪೂರ್ತಿಯಾಗಿ ಭಾವಿಸಲು ಸಾಧ್ಯವಿದೆ.

ಲಂಕೇಶರನ್ನು ಏಕೆ ಓದಬೇಕು? Read Post »

ಕಾವ್ಯಯಾನ

ಕಾವ್ಯಯಾನ

ನದಿಯಾಚೆ ಊರಿನಲ್ಲಿ ಕಾಯುತ್ತಿದ್ದೇನೆ ಮೂಗಪ್ಪ ಗಾಳೇರ ಅನಾಥ ಶವವಾಗಿ ಮಲಗಿರುವ ನನ್ನ ಒಂದೊಂದು ಕನಸುಗಳು ಇನ್ನೂ ಉಸಿರಾಡುತ್ತಿವೆ ಎಂದರೆ ನೀ ಬಿಟ್ಟು ಹೋದ ನೆನಪುಗಳು ಚುಕ್ಕಿ ಚಂದ್ರಮರಂತೆ ಅಜರಾಮರ ಎಂದರ್ಥ| ಉಸಿರಾಟಕ್ಕೂ ಉಸಿರಿಗು ಕನಸುಗಳಿಗು ನೆನಪುಗಳಿಗು ವ್ಯತ್ಯಾಸ ತಿಳಿಯದೆ ಶವವಾದ ಈ ಹೃದಯಕ್ಕೆ ಈ ಕವಿತೆಗಳೇ ಔಷಧಿ ಎಂದರೆ ತಪ್ಪಿಲ್ಲ ಒಮ್ಮೆ ನೀ ಹಿಂದಿರುಗಿನೋಡಿದರೆ ಗೊತ್ತಾಗುತ್ತಿತ್ತು ನಾನೆಟ್ಟ ಹೂವಿನ ಗಿಡಗಳು ನೂರಾರು ಜಾತಿಯದ್ದಾಗಿದ್ದರೂ ಅವುಗಳಿಂದ ಸೂಸುವ ಕಂಪು ಒಂದೆಂದು ಒಂದೊಮ್ಮೆ ನೀ ಮುಂದಿಟ್ಟ ಹೆಜ್ಜೆ ತಿರುಗಿಸಿ ಹಿಂದಿಟ್ಟರೆ ನನ್ನ ಹೃದಯದ ಆಕೃತಿ ಅಷ್ಟೇ ಅಲ್ಲ ನನ್ನ ಭವಿಷ್ಯದ ಚಿತ್ರಣವು ಬದಲಾಗಬಹುದು ಕೆರೆಯ ದಂಡೆಯ ಮೇಲೆ ಕೂತು ಕಂಡ ಕನಸುಗಳಿಗೆಲ್ಲಾ…… ಒಂಟಿಯಾಗಿದ್ದಾಗ ಬರೆದ ಕಾವ್ಯಗಳಿಗೆಲ್ಲಾ…… ಮತ್ತೆ ನಿನ್ನ ಬಾಚಿ ತಬ್ಬಿಕೊಳ್ಳುವ ಬಯಕೆ ಬಂದುಬಿಡು ನದಿಯಾಚೆ ಊರಿನಲ್ಲಿ ಕಾಯುತ್ತಿದ್ದೇನೆ……! ****************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಸೀರೆ ಮತ್ತು ಬಟ್ಟೆ ಡಾ.ಗೋವಿಂದ ಹೆಗಡೆ ಸೀರೆ ಮತ್ತು ಬಟ್ಟೆ ಆದರೂ ಈ ಸೀರೆ ಎಂಥ ಯಕ್ಷಿಣಿ! ಮೈತುಂಬ ಹೊದ್ದ ಸೆರಗಾಗಿ ಗಜಗೌರಿ ಎನಿಸಲೂ ಸೈ ಮಾಟದ ಬೆನ್ನು ಸೊಂಟ ಆಕರ್ಷಕ ಹೊಕ್ಕುಳ ಸುಳಿ ತೋರಿಸಿ ಹಸಿವು ಕೆರಳಿಸಲೂ ಸೈ ‘ನಾವೇನು ಸೀರೆ ಉಟ್ಟಿಲ್ಲ’ ಎಂದೆಲ್ಲ ಪೌರುಷ ತೋರಿಸುವಂತಿಲ್ಲ ಈಗ ನೀರೆಗೂ ಸೀರೆ ಕಡ್ಡಾಯವಲ್ಲ! ಆಯ್ಕೆಗಳಿವೆ ಅವಳಿಗೆ ಆದರೂ ‘ಸೆರಗು ಸೊಂಟಕ್ಕೆ ಸುತ್ತಿ’ ‘ವೀರಗಚ್ಚೆ ಹಾಕಿ’ ಎಂದೆಲ್ಲ ನಾರೀಶಕ್ತಿಯನ್ನು ಬಣ್ಣಿಸುವುದುಂಟು ಗಂಡ ಅರ್ಧ ಸೀರೆಯನ್ನು ಹರಿದು ಸುತ್ತಿಕೊಂಡು ನಾಪತ್ತೆಯಾದಾಗ ದುರುಳ ಉಟ್ಟ ಸೀರೆಯನ್ನು ಸೆಳೆಯುವಾಗ ಎದ್ದು ನಿಂತಿದ್ದಾಳೆ ಅವಳು ತನ್ನ ಅಂತಃಶಕ್ತಿಯನ್ನೇ ನೆಚ್ಚಿ ಸೀರೆಯ ನೆರಿಗೆಯನ್ನು ಎಷ್ಟೊಂದು ಸಲ ಬೆರಳುಗಳು ನೇವರಿಸಿವೆ ಸುಕ್ಕಾಗಿದ್ದು ಸೀರೆ ಮಾತ್ರವೇ? ಸೆರಗಿನ ಕೊನೆ ಕಣ್ಣ ಪಸೆಯನ್ನು ಎಷ್ಟೆಲ್ಲ ಬಾರಿ ಹೀರಿ ಸಂತೈಸಿದೆ ಯಾವೆಲ್ಲ ನಿಟ್ಟುಸಿರು ಕರಗಿದೆ ಸೀರೆಯ ಮೃದು ಒಡಲ ಹಿಂದೆ ಗಂಡಸಿನ ಅಹಂಕಾರಕ್ಕೋ ಅವಳು ಹಾಸಿಗೆ ಅಥವಾ ಪೊರೆಯುವ ಮಡಿಲು ಅವಳ ಹುಟ್ಟೇ ಬೇರೆ! ಎದೆಯೂಡೆಂದ ತ್ರಿಮೂರ್ತಿಗಳ ಕೂಸಾಗಿಸಿ ಸಲಹಿದ್ದಾಳೆ ಅವಳು ಅಜಾತನಿಗೂ ಎದೆಹಾಲು ಉಣಿಸಿದ್ದಾಳೆ ಜಾತನಿಗೆ ತಾಯಿಯಾಗುವುದು- ಅದೇನು ಮಹಾ! ಕಾಡುವ ಕಣ್ಣು ಕೈ ತಾಳಿ ಕಟ್ಟಿದ ಕಾರಣಕ್ಕೆ ತನ್ನ ಹಕ್ಕೆನ್ನುವ ಪುರುಷಾಮೃಗ ದ ತುರಿಕೆ ತೀಟೆಗೆ ಬುದ್ಧಿ ಬಂದಿರಬಹುದೇ ಸೀರೆಯಲ್ಲ, ನೂಲಿನ ಹಂಗನೂ ಕಳಚಿ ನಡೆದಾಗ ಅಕ್ಕ ಸಂತೆ-ಸೀಮೆಯ ದಾಟಿ ಬಯಲನ್ನು ಬಿತ್ತಿಕೊಂಡಾಗ ಬಟ್ಟೆಯ ಗೊಡವೆಯೆಲ್ಲಿ ***********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಶಿವನ ನೆನೆಯಲೆಂದು ರೇಖಾ ವಿ. ಕಂಪ್ಲಿ ಸಾವಿರದ ಮೆಟ್ಟಿಲ ಮೇಲೊಂದು ಕನಸು ಕಾಣುವವನ ಭಾವನೆಯ ಮೇಲೊಂದು ನನಸು ಇಟ್ಟನು ದೇವಾ ಹೆಣ್ಣ ಮೇಲೊಂದು ಸೊಗಸು ಮಠ ಒಂದು ಕಟ್ಟಲಿಲ್ಲ ಗಂಡು ಮೇಲೊಂದು ಮನಸು ಆಸೆಗಳ ಅರಿಬಿಟ್ಟ ಅಂಚಿಕೆಯ ಮಾಡದೇ ಅನುದಿನವು ಅವನ(ದೇವರ) ನೆನೆಯಲೆಂದು ಪಾದುಕೆಗಳಿಗೊಂದು ಹೊದುಕೆ ಕೊಟ್ಟವನು ಮನಸೆಂಬ ಹೊದುಕೆಗೆ ಆಳು ನೆನಪುಗಳ ನಿಟ್ಟು ತನ್ನ ಮುಟ್ಟುವ ಗಟ್ಟಿ ಗುಟ್ಟಾಗು ಎಂದು ಮೆಟ್ಟು ಭಾವನೆಯ ನಿನ್ನ ಪಟ್ಟು ಮೀರೆಂದು ತಟ್ಟು ಶಿವನೆದೆಯ ಕರುಣಾಂತರಂಗವನು ಅವನೊಲುಮೆಯ ಸಾಗರದ ಶರಧಿಯನು *****

ಕಾವ್ಯಯಾನ Read Post »

ಇತರೆ

ಪ್ರಸ್ತುತ

‘ಜಾಲ’ತಾಣ ಸ್ಮಿತಾ ರಾಘವೇಂದ್ರ ಹೆಸರೇ ಹೇಳುವಂತೆ ಇದೊಂದು “ಜಾಲ” ಮತ್ತೆ ನಾವೆಲ್ಲ ಅಲ್ಲಿ “ತಾಣ” ಪಡೆದವರು ಜಾಲದೊಳಗೆ ಸಿಲುಕಿಕೊಂಡ ಕೀಟದಂತಾಗಿದ್ದೇವೆ.. ಆದರೂ ನಾವಿಲ್ಲಿ ತಂಗಿದ್ದೇವೇ ತಂಗುತ್ತೇವೆ ಇಂದೂ ಮುಂದೂ ಸದಾ ತಂಗಲೇ ಬೇಕಾದ ಜಾಲದಲ್ಲಿ ಒಂದಿಷ್ಟು ಜಾಗೃತೆಯೂ ಮುಖ್ಯ ಅಂಶವಾಗುತ್ತದೆ. ಹೌದು.. ಸಾಮಾಜಿಕ ಜಾಲತಾಣವು ಸಂಬಂಧಗಳನ್ನು ಕಸಿಯುವಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಎಂಬುದು ಜನ ಜನಿತವಾದ ಮಾತು ಮತ್ತು ಸತ್ಯದ ಮಾತುಕೂಡಾ.. ಯಾಕೆ!? ಎಂದು ಸ್ವಲ್ಪವೇ ಸ್ವಲ್ಪ ವಿಚಾರಮಾಡುವದಕ್ಕೂ ನಮಗಿಂದು ಸಮಯವಿಲ್ಲ.. ಯಾಕೆಂದರೆ ನಮ್ಮ ಅಳಿದುಳಿದ ಸಮಯವನ್ನು ಜಾಲತಾಣ ನುಂಗಿಹಾಕಿದೆ. ಚಕ್ರವ್ಯೂಹದಲಿ ಸಿಕ್ಕಿಕೊಂಡ ಅಭಿಮನ್ಯುವಿನಂತಾಗಿದ್ದೇವೆ. ಯಾಕೆ ಎಂದು ಯೋಚಿಸಿದರೆ ಹಲವಾರು ವಿಷಯಗಳು ಅನಾವರಣವಾಗುತ್ತಲೇ ಹೋಗುತ್ತದೆ. ಈ ಜಾಲತಾಣ ನಮ್ಮ ವಯಕ್ತಿಕ ವಿಷಯಗಳಿಗೆ, ಸಂಬಧಗಳಿಗೆ ಅವಕಾಶ ಮಾಡಿಕೊಡುವುದಿಲ್ಲ. ನಿರಂತರವಾಗಿ ಹೆಚ್ಚು ಸಮಯಗಳಕಾಲ ಜಾಲತಾಣದಲ್ಲಿ ತೊಡಗುವುದು ಸ್ಥಿರ ಸಂಬಂಧಗಳಿಗೆ ಅಂದರೆ ಅಣ್ಣ- ತಮ್ಮ, ಗಂಡ- ಹೆಂಡತಿ, ಅಪ್ಪ -ಅಮ್ಮ, ಅಕ್ಕ -ತಂಗಿ, ಹೀಗೇ ಹಲವು ಸಬಂಧಗಳಿಗೆ ಸಮಸ್ಯೆಯನ್ನು ಉಂಟುಮಾಡುತ್ತಿದೆ.ಅವರೊಂದಿಗಿನ ಸಂವಹನ ಕಡಿಮೆಯಾಗುತ್ತಿದೆ. ಬೇಕಾದ,ಮತ್ತು ಬೇಡದ ಎಲ್ಲ ಸಂಗತಿಗಳೂ ಇಲ್ಲಿ ಅಡಕವಾಗಿರುವಕಾರಣ,ಹೆಚ್ಚು ಹೆಚ್ಚು ಸಮಯ ಜಾಲತಾಣದಲ್ಲಿ ಮುಳುಗುವದರಿಂದ ಅವಶ್ಯಕತೆ ಗಿಂತ ಹೆಚ್ಚು ವಿಷಯ ಸಂಗ್ರಹಣೆ ಹವ್ಯಾಸವಾಗಿ ಹೋಗುತ್ತದೆ. ಬಿಟ್ಟೆನೆಂದರೂ ಬಿಡದ ಮಾಯೆ ಇದು. ಸಂಬಂಧಗಳ ಮೂಲಭೂತ ಅಂಶ ನಂಬಿಕೆ. ಜಾಲತಾಣದ ಕಾರಣದಿಂದ ನಂಬಿಕೆ ಎನ್ನುವದು ಗೋಡೆಯ ತುದಿಯಲ್ಲಿ ಇಟ್ಟ ತಕ್ಕಡಿಯಂತಾಗಿದೆ ಸಾಮಾಜಿಕ ಜಾಲತಾಣದಲ್ಲಿ ವಯಕ್ತಿಕ ಅಭಿಪ್ರಾಯಗಳು ಮತ್ತು ಮಾಹಿತಿ ಹಂಚಿಕೆ ಹೆಚ್ಚು ದುರ್ಬಲವಾಗಿರುತ್ತದೆ. ಅದು ಯಾವಕಾರಣಕ್ಕೂ ಸೇಪ್ ಕೂಡ ಅಲ್ಲ. ನಮ್ಮ ಇಡೀ ವ್ಯಕ್ತಿತ್ವವನ್ನೇ ಸೆರೆಹಿಡಿದು ಅಳೆದು ತೂಗಿಬಿಡುತ್ತದೆ ಈ ಜಾಲತಾಣ ಈಗೀಗ ಹ್ಯಾಕರ್‌ಗಳ ಹಾವಳಿಯಿಂದಾಗಿ ನಮ್ಮ ಎಲ್ಲಾ ಮಾಹಿತಿಗಳು ಸೋರಿಕೆಯಾಗುವ ಸಂಭವವು ಜಾಸ್ತಿಯಾಗಿರುತ್ತದೆ ಮತ್ತು ಮೊಬೈಲ್‌ನಲ್ಲಿ ನಾವು ಬ್ರೌಸ್ ಮಾಡುವಾಗ ಕೊಡುವ ನಮ್ಮ ಮಾಹಿತಿಗಳೇ ಆಗಲಿ, ಫೋಟೋಗಳೇ ಅಗಲಿ ದುರ್ಬಳಕೆಯಾಗುತ್ತಿರುವುದು ಅತ್ಯಂತ ದುಃಖಕರವಾದ ಸಂಗತಿಯಾಗಿದೆ. ಅಲ್ಲದೇ ನಮ್ಮ ಮೊಬೈಲ್‌ಗಳಲ್ಲಿರುವ ಮಾಹಿತಿಯನ್ನು ಸುಲಭವಾಗಿ ಕದಿಯುವಂತ ಇತರ ಸ್ವಾಫ್ಟವೇರ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿರುವ ಕಾರಣ ಯಾವುದಕ್ಕೂ ಮೊಬೈಲ್‌ಗಳಲ್ಲಿ ನಮ್ಮ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸದಿರುವುದು ತೀರಾ ಸೂಕ್ತ. ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಾ ಬೇಡದ ನೊವುಗಳಿಗೆ ದುರ್ಘಟನೆಗಳಿಗೆ ನಾವೇ ಎಡೆಮಾಡಿಕೊಳ್ಳುತ್ತಿದ್ದೇವೆ.. We all went to Goa with the family” ಅಂತ ಯುವತಿಯೊಬ್ಬಳು ಕುಟುಂಬದ ಜೊತೆಗಿನ ಫೋಟೋ ಶೇರ್ ಮಾಡಿದ್ದಳು ಅದನ್ನು ನೋಡಿದ ಯಾರೊ ಒಬ್ಬ ಅಸಾಮಿ ತಿರುಗಿ ಬರುವದರೊಳಗೆ ಮನೆ ದರೋಡೆಮಾಡಿ ಹೋಗಿದ್ದ. ಎಲ್ಲೇ ಹೋದರೂ ಏನೇ ತಿಂದರೂ ಎಲ್ಲವನ್ನೂ ಜಾಲತಾಣದಲ್ಲಿ ಅಪ್ಡೇಟ್ ಮಾಡುವ ನಾವು ಎಷ್ಟು ಅಜಾರೂಕರಾಗುತ್ತಿದ್ದೇವೆ. ಅವಶ್ಯಕತೆಗಿಂತ ಹೆಚ್ಚಾಗಿ ಬಳಸಿದಾಗಲೇ ಇವೆಲ್ಲ ಅವಾಂತರಗಳು ಆಗೋದು. ” ಯಾರಾದರೂ ಏನನ್ನಾದರೂ ಹಂಚಿಕೊಂಡಾಗ ಫೋಟೋಗಳನ್ನು ಲೈಕ್‌ ಮಾಡಿದಾಗ ನಂತರ, ಅವರು ಯಾರು , ಎಲ್ಲಿಂದ, ಎಂಬಿತ್ಯಾದಿ ವಯಕ್ತಿಕ ಚಾಟ್‌ ನಡೆಯುತ್ತದೆ. ಅದು ಅಲ್ಲಿಗೇ ಮುಗಿಯದೇ ಇನ್ಬಾಕ್ಸನಲ್ಲಿ ಇಣುಕಿ ಸಂಪರ್ಕ ಸಾಧಿಸಲು ಹಾತೊರೆಯುತ್ತಾರೆ. ಸಹಜ ಮಾತಾದರೆ ಎಲ್ಲವೂ ಓಕೆ ಕೆಲವರಿರುತ್ತಾರೆ ಜೊಲ್ಲು ಪಂಡಿತರು, ಅಂತವರು ಹಿಂದೆ ಮುಂದೆ ನೋಡುವದಿಲ್ಲ ನೀನು ನನಗೆ ಬಹಳ ಇಷ್ಟ, ಸಕತ್ ಆಗಿ ಕಣ್ತೀಯಾ, ನಾನು ನಿನ್ನ ಲವ್ ಮಾಡ್ತೀನಿ, ಅಂತೆಲ್ಲ ಒಂದೇ ಸಮನೇ ಮಾತೊಗೆದು ಬಿಡುತ್ತಾರೆ.. ಅದರ ವಿವರಣೆ ಕೇಳುವ ಸಂಯಮ ಇಲ್ಲದ ಸಂಬಂಧಗಳಿಗೆ ಇಷ್ಟು ಸಾಕಲ್ಲವಾ? ಅದೆಷ್ಟೋ ಸುಂದರ ಸಂಬಂಧಗಳು ಸಂಸಾರಗಳು ಇದರಿಂದ ಘಾಸಿಗೊಳಗಾಗಿರುವದು ಎಲ್ಲರಿಗೂ ತಿಳಿದ ವಿಚಾರ. ತಪ್ಪುಗಳೇ ನಮ್ಮಿಂದ ಘಟಿಸಬೇಕೆಂದೇನೂ ಇಲ್ಲ. ಬಳಕೆಯ ಅಜ್ಙಾನದಿಂದಲೇ ಹೆಚ್ಚು ತೊಂದರೆಗಳು ಆಗುವದು. ಹಳ್ಳಿಗಳಲ್ಲಿ ಹೆಚ್ಚೆಚ್ಚು ಘಟನೆಗಳು ಹೇಗೆ ಜರುಗುತ್ತವೆ ಗೊತ್ತಾ?!ಸ್ವಲ್ಪ ವಯಸ್ಸಾದವರು, ಹೆಣ್ಮಕ್ಕಳು,ಪ್ರಪಂಚಕ್ಕೆ ತೆರೆದುಕೊಳ್ಳದ ಹಲವು ಮನಸುಗಳು ಇರುತ್ತವೆ. ಅವರು ಯಾವತ್ತೂ ಜಗತ್ತೇ ನಮ್ಮ ಕೈಯೊಳಗೆ ಎಂಬ ಮಾಯೆಯನ್ನು ಕೈಯಲ್ಲಿ ಹಿಡಿದು ನೋಡುರುವದಿಲ್ಲ. ಏನೋ ಸಮಯ ಕಳೆಯಲಿ ಎಂದೋ ಎಲ್ಲರ ಹತ್ತಿರವೂ ಇದೆ ಎಂದೋ ಒಂದು ಹೊಸ ಮೊಬೈಲ್ ಕೈಗೆ ಬಂದಿರುತ್ತದೆ.. ಅದರ ತಂತ್ರಜ್ಞಾನದ ಅರಿವಿನ ಕೊರತೆ ಸಾಕಷ್ಟು ಇರುವಕಾರಣ,ಯಾರೋ ಒಬ್ಬರು ಪೇಸ್ಬುಕ್ ವಾಟ್ಸಪ್ ಅಕೌಂಟ್ ಒಂದನ್ನು ಮಾಡಿಕೊಟ್ಟು ಬಿಡುತ್ತಾರೆ. ಅದರ ಉಪಯೋಗದ ಬಗ್ಗೆ ಮಾಹಿತಿ ನೀಡುವದಿಲ್ಲ. ಜಾಲತಾಣವೆಂದರೆ ಹಂಚಿಕೊಳ್ಳುವದು ಅಂತಷ್ಟೇ ಅವರಿಗೆ ತಿಳಿದಿರುವ ವಿಚಾರ.. ಶೆರ್ ಮಾಡಲು ಹೋಗಿ ಟ್ಯಾಗ್ ಮಾಡುವದು..ಕಂಡಿದ್ದಕ್ಕೆಲ್ಲ ಕಮೆಂಟ್ ಮಾಡುವದು. ಎಲ್ಲರೊಂದಿಗೆ ಸಂವಹನ ನಡೆಸುವದು. ಎಲ್ಲರೂ ಮಾಡಿದಂತೆಯೇ ತಾವೂ ಮಾಡಬೇಕೆಂಬ ತುಡಿತಕ್ಕೆ ಬೀಳುತ್ತಾರೆ. ಇವುಗಳಿಂದ ಅವರಿಗೆ ಅರಿಯದಂತೆ ಎದುರಿಗಿನ ವ್ಯಕ್ತಿ ಇಂತವರ ಮುಗ್ಧತೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುತ್ತಾನೆ. ಕ್ರಮೇಣ ಇವರೇ ಅರಿಯದ ಜಾಲದೊಳಗೆ ಬಿದ್ದು ಒದ್ದಾಡುತ್ತಾರೆ.. ನಿಭಾಯುಸುವ ಜಾಣತನವಿಲ್ಲದೇ ಸಂಸಾರವನ್ನು ತೊರೆದು ಹೋಗುವದು,ಆತ್ಮಹತ್ಯೆ ಮಾಡಿಕೊಳ್ಳುವದು, ಇಂತಹ ಕಠಿಣ ನಿರ್ಧಾರಕ್ಕೆ ಬರುತ್ತಾರೆ.. ಇಡೀ ಸಂಸಾರದ ನೆಮ್ಮದಿಯೇ ನಾಶವಾಗುವ ಹಂತಕ್ಕೆ ಒಂದು ಮುಗ್ಧ ಸಂಸಾರವೊಂದು ಬಂದು ನಿಲ್ಲುತ್ತದೆ. ಇದಕ್ಕೆಲ್ಲ ತಿಳುವಳಿಕೆಯ ಕೊರತೆಯೇ ಕಾರಣ. ಕೆಲವರು ಗೊತ್ತಿದ್ದು ಇನ್ನು ಕೆಲವರು ಗೊತ್ತಿಲ್ಲದೇ ಹಗಲು ಕಂಡ ಬಾವಿಗೆ ರಾತ್ರಿ ಬಂದು ಬೀಳುತ್ತಿದ್ದಾರೆ.. ಕಣ್ಣಿಗೆ ಕಾಣದ ಎಂದೂ ನೋಡದ ಸ್ನೇಹಿತರಿಗೆ ಹುಟ್ಟಿದ ದಿನದ ಶುಭಾಶಯ ತಪ್ಪದೇ ಕೋರುವ ನಾವು, ಮನೆಯೊಳಗಿನ ಸಂಬಂಧ ಮರೆತೇ ಬಿಡುತ್ತೇವೆ. ಅತಿಯಾದ ಸಾಮಾಜಿಕ ಜಾಲತಾಣವು ನಮ್ಮ ಸ್ವಭಾವವನ್ನೇ ಬದಲಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಮಾತೇ ಮರೆತುಹೋಗಿದೆ. ಒಬ್ಬರೇ ನಗುವ ಹುಚ್ಚರಂತಾಗಿದ್ದೇವೆ.. ಕಿವಿಯೊಳಗಿನ ಇಯರ್ ಪೋನ್ ಯಾರು ಕಿವುಡರು ಎನ್ನುವದು ತಿಳಿಯದಾಗಿದೆ. ಸೋಶಿಯಲ್‌ ಮಿಡಿಯಾ ಬಳಕೆಯಿಂದ ತಮ್ಮನ್ನು ತಾವು ಸ್ವಭಾವದಲ್ಲಿ ಹೇಗೆ ನಿಯಂತ್ರಿಸಿಕೊಳ್ಳಬೇಕು ಎಂದು ಎಚ್ಚರವಹಿಸಿಕೊಳ್ಳಬೇಕಾದುದು ಸದ್ಯದ ತುರ್ತಿನ ಪರಿಸ್ಥಿತಿ. ಕೇವಲ ಜಾಲತಾಣದಲ್ಲಿಯೇ ಎಲ್ಲವನ್ನೂ ಸೃಷ್ಟಿಸಿ ಕೊಳ್ಳುವ ಹಂಬಲ ಹಪಾಹಪಿತನ ತೋರುತ್ತಿದ್ದೇವೆ. ಈ ಗ್ಯಾಜೆಟ್ ಲೋಕ ಎಲ್ಲವನ್ನೂ ಕೊಡಲು ಎಂದಿಗೂ ಸಾದ್ಯವಿಲ್ಲ. ಮದರ್ಸ ಡೇ ಪೋಷ್ಟ ಹಾಕಲು ಒಬ್ಬಾತ ಅಮ್ಮನ ಪೋಟೋ ಹುಡುಕುತ್ತಿದ್ದ ಅವನ ಹತ್ತಿರ ಒಂದೇ ಒಂದು ಫೋಟೋ ಕೂಡ ಇರಲಿಲ್ಲ. ಅಮ್ಮ ಅನಾಥಾಶ್ರಮದಲ್ಲಿ ಇದ್ದಳು. ಏನಂತ ಹೇಳೋದು ಈ ನಡತೆಗೆ??! ನಮ್ಮೊಳಗಿನ ಸಂಬಂಧಗಳನ್ನು ಮರೆತು ಇನ್ನೆಲ್ಲೋ ಆಪ್ತತೆಯನ್ನು ಹುಡುಕುತ್ತೇವೆ.. ಮುಖಕ್ಕೆ ಮುಖತೀಡಿಕೊಂಡು ಹಾಕುವ ಪೋಟೊಗಳೆಲ್ಲ ರಾತ್ರಿ ಮುಖತಿರುಗುಸಿ ಮಲಗುತ್ತವೆ ಎನ್ನುವದು ಅರಿವಾಗಬೇಕಿದೆ. ತೋರಿಕೆಯ,ಪ್ರದರ್ಶನದ ಬದುಕು ಪರಿತಪ್ಪಿಸುವತ್ತ ಸಾಗುತ್ತಿದೆ. ಮಕ್ಕಳಿಗೆ ಹೇಳಬೇಕಾದ ದೊಡ್ಡವರೇ ಮೊಬೈಲ್ ಎಂಬ ಲೋಕದಲ್ಲಿ ಮುಳುಗಿ ಹೋಗಿದ್ದಾರೆ.. ತಂದೆ ತಾಯಿಯರೇ ಮಗು ನಮ್ಮ ಮೊಬೈಲ್ ಅನ್ನು ಪದೇ ತೆಗೆದುಕೊಳ್ಳುತ್ತದೆ ನಮಗೆ ಸಿಗುವದೇ ಇಲ್ಲ ಎಂದು,ಅವರಿಗಾಗಿಯೇ ಬೇರೆ ಮೊಬೈಲ್ ಕೊಡಿಸುವಷ್ಟು ಬುದ್ಧಿವಂತರಾಗಿದ್ದಾರೆ. ಕೇವಲ ಮಕ್ಕಳಿಗೆ ಮಾತ್ರವಲ್ಲ ದೊಡ್ಡವರಿಗೂ ಜಾಲತಾಣಗಳು ಅಷ್ಟೇ ಅಹಿತಕರ ಎಂದು ಅರಿವಾಗಬೇಕಿದೆ. ಎಲ್ಲ ಅರಿತ ದೊಡ್ಡವರೇ ಮೊಬೈಲ್ ಎಂಬ ಮಾಯೆಯ ದಾಸರಾದರೆ ಚಿಕ್ಕಮಕ್ಕಳು ಆಗದೇ ಇರುತ್ತಾರೆಯೇ.. ಎಲ್ಲಿ ನೋಡಿದರೂ ಮಕ್ಕಳನ್ನು ಮೊಬೈಲ್ ಇಂದ ದೂರವಿಡಿ ಎಂಬ ಮಾತು ಕೇಳಿಬರುತ್ತದೆ. ಕೇವಲ ಹೇಳುವದರಿಂದ ಮಕ್ಕಳು ಕಲಿಯಲಾರು ನಮ್ಮ ನಡೆಯನ್ನು ಅನುಸರಿಸುತ್ತಾರೆ. , ರಸ್ತೆಬದಿಯಲ್ಲಿ ಭಿಕ್ಷೆ ಬೇಡುವವರು,ಅಂಗವಿಕಲರು,ಅಪಘಾತಕ್ಕೆ ಒಳಗಾದವರು,ಇಂತಹ ಹತ್ತು ಹಲವು ಫೋಟೋ ಗಳನ್ನು ನೋಡಿ ಮರುಗುವ ಕಣ್ಣೀರ ದಾರೆಯೇ ಇಮೊಜಿಗಳಲ್ಲಿ ಉಕ್ಕಿಸುವ ನಾವು. ನಿಜವಾಗಿ ಇಂತವರು ನಮ್ಮ ಎದುರು ಬಂದಾಗ ಕಂಡೂ ಕಾಣದಂತೆ ಹೋಗುತ್ತೇವೆ. ಇಲ್ಲ ಮತ್ತೊಂದು ಫೋಟೋವನ್ನು ತೆಗೆದು ಹಂಚಿ ಲೈಕು ಕಮೆಂಟ್ ಗಿಟ್ಟಿಸಿಕೊಳ್ಳುವತ್ತ ಚಿತ್ತ ಹರಿಸುತ್ತೇವೆ. ಎಷ್ಟೊಂದು ಕಠಿಣ ಅಜಾಗರೂಕ ಬುದ್ಧಿಹೀನರಾಗುತ್ತಿದ್ದೇವೆ ನಾವುಗಳು. ಒಮ್ಮೆ ಚಿಂತನೆ ಮಾಡಿ ಮೊಬೈಲ್ ಕೆಳಗಿಟ್ಟು ಪ್ರಪಂಚ ನೋಡಿ. ಸಾಕಷ್ಟು ಸಂಗತಿಗಳು ನಮ್ಮ ಕಣ್ಣು ತೆರೆಸುತ್ತವೆ. ತೀರಾ ವಯಕ್ತಿಕ ಬದುಕಿನ ಒಳಮನೆಗೆ ಮೊಬೈಲ್ ಎಂಬ ಮಾಯೆ ತನ್ನ ಆಟಾಟೋಪ ಮೆರೆಯದಂತೆ ಜಾಗ್ರತೆ ವಹಿಸುವದು ಇಂದಿನ ದಿನಗಳಲ್ಲಿ ತುಂಬಾ ಅವಶ್ಯ.ಸಂಬಂಧಗಳು ಮುರಿಯುತ್ತಿರುವದೇ ಮೊಬೈಲ್ ಗಳಿಂದ. ತಲೆ ತಗ್ಗಿಸಿ ನನ್ನ ನೋಡು, ತಲೆ ಎತ್ತಿ ನಿಲ್ಲುವಂತೆ ಮಾಡುತ್ತೇನೆ” ಎಂದು ಪುಸ್ತಕ ಹೇಳಿದರೆ, “ತಲೆ ತಗ್ಗಿಸಿ ನನ್ನ ನೋಡು, ಮತ್ತೆ ತಲೆ ಎತ್ತದಂತೆ ಮಾಡುತ್ತೇನೆ” ಎಂದು ಮೊಬೈಲ್ ಹೇಳಿತಂತೆ. ಈ ಎಲ್ಲಾ ಮಾತುಗಳು ನಮಗೆ ನಗುತರಿಸುತ್ತದೆ ಎನ್ನುವುದು ಎಷ್ಟು ಸತ್ಯವೋ ಇದೇ ನಿಜವಾದ ವಾಸ್ತವ ಸತ್ಯ ಎನ್ನುವುದು ಈಗಲಾದರೂ ನಾವು ಒಪ್ಪಿ ಕೊಳ್ಳದೇ ಹೋದರೆ ನಾವು ತೆಗೆದ ಗುಂಡಿಯಲ್ಲಿ ನಾವು ಬೀಳುವದಲ್ಲದೇ ನಮ್ಮ ಎಲ್ಲ ಸಂಬಂಧಗಳನ್ನು ಎಳೆದು ಮಣ್ಣು ಮುಚ್ಚಲೇಬೇಕಾಗುತ್ತದೆ. ಅದರ ಬದಲು ಹೀಗೂ ಮಾಡಿನೋಡಬಹುದು. *ಇಂತಿಷ್ಟು ಸಮಯ ಅಂತ ನಿಗದಿ ಮಾಡಿಕೊಂಡು ಆ ಸಮಯದಲ್ಲಿ ಮಾತ್ರ ಜಾಲತಾಣ ತರೆಯಿರಿ *ಗಂಡ ಹೆಂಡತಿಯ ನಡುವೆ ಪಾಸ್ವರ್ಡಿನ ಬೀಗದ ಕೀಲಿ ಇಬ್ಬರಲ್ಲಿಯೂ ಇರಲಿ. *ಮಲಗುವ ಮನೆಗೆ ಮೊಬೈಲ್ ಒಯ್ಯಬೇಡಿ *ಬೆಳಿಗ್ಗೆ ಏಳುತ್ತಲೇ ಜಾಲತಾಣದ ಒಳಹೊಕ್ಕುವದನ್ನು ನಿಷೇಧಿಸಿ. *ಮನೆಯವರು ಮಾತನಾಡುವಾಗ ಮೊಬೈಲ್ ಮುಟ್ಟಬೇಡಿಮೊಬೈಲ್ ಗೆ ಮೀಸಲಿಟ್ಟ ಸಮಯವನ್ನು ಪ್ರೀತಿ ಪಾತ್ರರಿಗೊಂದಿಷ್ಟು ಅವಷ್ಯವಾಗಿ ಕೊಡಿ. *ಮಕ್ಕಳ ಎದುರು ಮೊಬೈಲ್ ಹಿಡಿಯಲೇಬೇಡಿ. *ಆಗಾಗ ಡಾಟಾ ಹಾಕಿಸುವದನ್ನೇ ನಿಲ್ಲಿಸಿ ಉಳಿತಾಯದ ಜೊತೆಗೆ, ನೆಮ್ಮದಿ ಮತ್ತು ಬೇರೆ ವಿಚಾರಗಳಿಗೆ ತರೆದುಕೊಳ್ಳಲು ಸಮಯವೂ ಸಿಗುತ್ತದೆ.ಅಲ್ಲವೇ!? ***********

ಪ್ರಸ್ತುತ Read Post »

ಕವಿತೆ ಕಾರ್ನರ್

ಚಳಿ ಮತ್ತು ಅಗ್ಗಿಷ್ಠಿಕೆ

ಚಳಿ ಮತ್ತು ಅಗ್ಗಿಷ್ಠಿಕೆ ಮಳೆಗಾಲದ ಒಂದು ಸಂಜೆ ಕಪ್ಪುಗಟ್ಟಿದ್ದ ಹಡಗಿನಂತ ಮೋಡಗಳುಸ್ಪೋಟಗೊಂಡು ಸುರಿದ ಜಡಿ ಮಳೆಗೆಸಿಕಿ ತೊಯ್ದು ತೊಪ್ಪೆಯಾದವಳ ಬಟ್ಟೆ ಒಣಗಿಸಲುನನ್ನ ಪುಟ್ಟ ಹಿತ್ತಲಿತ್ತು ಗಡಗಡ ನಡುಗಿಸುವ ಚಳಿಗೆಅಗ್ಗಿಷ್ಠಿಕೆಯಾಗಿ ನಾನಿದ್ದೆ. ಮಳೆ ಸುರಿದು ಸರಿದು ಹೋಯಿತುಹಿಂಬಾಲಿಸಿಕೊಂಡು ಬಂದ ಬಿಸಿಲುಬಂದ ಮಳೆಯ ಮರೆಸಿತು ಮತ್ತೆಂದೂ ಇಲ್ಲಿ ಅಂತ ಘನಮೋಡ ಕಟ್ಟಲಿಲ್ಲಮಳೆಯಾಗಲಿಲ್ಲಬಿಸಿಲ ಝಳಕ್ಕೆ ಬರಬಿದ್ದ ಊರಿಗವಳೆಂದೂ ಬರಲೇ ಇಲ್ಲ ಮತ್ತೀಗ ಅಲ್ಲಿ ಮಳೆಯಾಗುತ್ತಿರ ಬಹುದುಅವಳಲ್ಲಿ ನೆನೆಯುತ್ತಲೂ ಇರಬಹುದು ಆ ಊರಲ್ಲೂ ಹಿತ್ತಲುಗಳಿವೆಜೊತೆಗೆ ಅಗ್ಗಿಷ್ಠಿಕೆಗಳೂ!******** ಕು.ಸ.ಮಧುಸೂದನ ಕು.ಸ.ಮಧುಸೂದನ

ಚಳಿ ಮತ್ತು ಅಗ್ಗಿಷ್ಠಿಕೆ Read Post »

You cannot copy content of this page

Scroll to Top