ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಆನಿ ಜಯಾ ಮೂರ್ತಿ ಪಂಜರದ ಹಕ್ಕಿ ಅಲ್ಲ ನೀನು ಸ್ವತಂತ್ರ ಹಕ್ಕಿ ನೀ ಹಾರುವೆ ಎಲ್ಲಿಬೇಕಲ್ಲಿ ಒಡೆಯ ನ ಭುಜದಲ್ಲಿ ಒಡತಿಯ ಕೈಯಲ್ಲಿ ಮನೆಯ ಮೂಲೆಯಲ್ಲಿ ನೀನು ಸಾಮಾನ್ಯ ಹಕ್ಕಿಯಲ್ಲ ಎಲ್ಲಿಂದ ಧರೆಗಿಳಿದೆ ವಾಸಿಸಲು ಇಲ್ಲಿ? ಇಂದ್ರನ ಸ್ವರ್ಗದಿಂದ ಇಳಿದೆಯಾ? ಅಪ್ಸರೆ ಗಂಧರ್ವರಿಂದ ಹಾಡಲು ಕಲಿತೆಯ? ನಾರದರ ತಂಬೂರಿ ಶ್ರುತಿ  ಜೊತೆಯ? ನಿನ್ನ ಹಾಡಿನ ಶೈಲಿ ಪುರಂದರ ತ್ಯಾಗರಾಜ ಶಯ್ಲಿ ನಿನ್ನ ಸ್ವರ ಹೋಲುವುದಿಲ್ಲಿ ಆಲಾಪನೆ, ಪಲ್ಲವಿ, ಚರಣ ದಲ್ಲಿ ಸ್ವರ ಆ ದೇವನ ಪ್ರಾರ್ಥನೆ ರೀತಿಯಲ್ಲಿ ಒಮ್ಮೊಮ್ಮೆ ಹಾಡುವೆ ದೊ, ರೆ, ಮಿ, ಫಾ, ಸೊಲ್, ಲ, ಸಿ ಪಾಶ್ಚತ್ಯ ಸಂಗೀತ ಶ್ಯಲಿಯಲ್ಲಿ ಹೌದು, ಎಲ್ಲಿದೆ ಸಂಗೀತಕ್ಕೆ ಎಲ್ಲೆ ನಿನ್ನ ಮಧುರ ಕೋಗಿಲೆ ಕಂಠ ಹೋಲುವುದು ಲತಾ, ಸುಬ್ಬಲಕ್ಷ್ಮಿಯರ ನೀನು ಸರಸ್ವತಿಯ ವರಪುತ್ರಿ, ನಿನ್ನ ಏಳು ಬಣ್ಣಗಳು ಸಪ್ತ ಸ್ವರಗಳಂತೆ ಆ ಕನಕಾಂಬರಿ ಚಿಹ್ನೆ ನಿನ್ನ ಪವಿ ತ್ರತೆಯ ಚಿಹ್ನೆ    ಒಡೆಯ ಒಡತಿಯರ ಮುದ್ದಿನ ಗಿಳಿ ನೀನು       ನಿನ್ನ ದನಿ ಕೇಳುವ ಸೌಭಾಗ್ಯ ನಮಗೂ ನೀಡು ‘ ಆನಿ ‘ *********

ಕಾವ್ಯಯಾನ Read Post »

ಇತರೆ

ಪ್ರಸ್ತುತ

ಕ್ಯಾಂಪಸ್ ಕೋಲಾಹಲ…… ಗಣೇಶ್ ಭಟ್ ಶಿರಸಿ ದೆಹಲಿಯ ಜವಾಹರಲಾಲ ನೆಹರೂ ವಿಶ್ವವಿದ್ಯಾಲಯ (ಜೆಎನ್‍ಯು) ಪುನಃ ಸುದ್ಧಿಯಲ್ಲಿದೆ. ವಿವಿಧ ಶುಲ್ಕಗಳ ಏರಿಕೆಯ ವಿರುದ್ಧ ಪ್ರತಿಭಟನೆ ನಡೆಸಿ, ಕೆಲವು ವಾರಗಳ ಹಿಂದೆ ಮಾಧ್ಯಮಗಳಿಗೆ ಆಹಾರವಾಗಿದ್ದ ಜೆಎನ್‍ಯುನಲ್ಲಿ ಮುಸುಕುಧಾರಿಗಳು ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹೊಡೆದು ಬಡಿದಿದ್ದಾರೆಂಬ ವಿಷಯ ಬಿತ್ತರವಾಗುತ್ತಿದೆ. ಕ್ಯಾಂಪಸ್‍ನಲ್ಲೇ ವಿದ್ಯಾರ್ಥಿಗಳಿಗೆ ರಕ್ಷಣೆ ಇಲ್ಲವೆಂಬ ವಿಷಯ ದೇಶದಾದ್ಯಂತ ಹಲವು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳನ್ನು ಕೆರಳಿಸಿ, ಪ್ರತಿಭಟನೆ ನಡೆಸಲು ಕಾರಣವಾಗಿದೆ. ನಾಲ್ಕಾರು ದಶಕಗಳ ಹಿಂದೆ ವಿಶ್ವವಿದ್ಯಾಲಯಗಳಲ್ಲಿ ಸೈದ್ಧಾಂತಿಕ ಚರ್ಚೆಗಳು ಇರುತ್ತಿದ್ದವು. ಅಭಿಪ್ರಾಯ ಭೇದಗಳು ಇದ್ದವು. ಆದರೆ ಇಂದಿನ ರೀತಿಯ ಹೊಡೆದಾಟ, ಬಡಿದಾ ಟಗಳು ಇರುತ್ತಿರಲಿಲ್ಲ. ಅಂದು ಸೈದ್ಧಾಂತಿಕ ನಿಲುವುಗಳನ್ನು ತಳೆಯುವ ವೈಯಕ್ತಿಕ ಸ್ವಾತಂತ್ರ್ಯವನ್ನು ಯಾರೂ ಆಕ್ಷೇಪಾರ್ಹವೆಂದು ಪರಿಗಣಿಸುತ್ತಿರಲಿಲ್ಲ. ವಿದ್ಯಾರ್ಥಿಗಳ ನಡುವಿನ ವೈಯಕ್ತಿಕ ಸಂಬಂಧಕ್ಕೆ ಸೈದ್ಧಾಂತಿಕ ಅಭಿಪ್ರಾಯ ಭೇದಗಳು ತೊಡಕುಂಟು ಮಾಡುತ್ತಿರಲಿಲ್ಲ. ಯಾಕೆಂದರೆ ಇಂದಿನಂತೆ ರಾಜಕೀಯ ಪಕ್ಷಗಳು ಕ್ಯಾಂಪಸ್‍ನಲ್ಲಿ ಮೂಗು ತೂರಿಸಿರಲಿಲ್ಲ. ನನ್ನದೇ ಅನುಭವದಿಂದ ಈ ವಿಷಯವನ್ನು ಇಷ್ಟೊಂದು ದೃಢವಾಗಿ ಹೇಳಲು ಸಾಧ್ಯವಾಗುತ್ತಿದೆ. ಎಪ್ಪತ್ತರ ದಶಕದ ಪ್ರಾರಂಭದಲ್ಲಿ ನಾನು ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ ನಮ್ಮ ಕ್ಯಾಂಪಸ್‍ನಲ್ಲಿ ಪ್ರಮುಖವಾಗಿ ಮೂರು ಆರ್ಥಿಕ ಸಿದ್ಧಾಂತಗಳ ಕುರಿತು ಚರ್ಚೆ ನಡೆಯುತ್ತಿತ್ತು. ಬಂಡವಾಳವಾದವೇ ಶ್ರೇಷ್ಠ ಎಂದು ನಂಬಿದವರು, ಕಮ್ಯುನಿಸಂ ನಿಂದಲೇ ಸರ್ವ ಸಮಸ್ಯೆಗಳಿಗೂ ಪರಿಹಾರವೆಂದು ನಂಬಿದವರು ಹಾಗೂ ಇವೆರಡನ್ನೂ ಟೀಕಿಸುತ್ತಾ ವಿಕೇಂದ್ರಿಕೃತ ಸಹಕಾರಿ ಅರ್ಥ ನೀತಿಯಿಂದಲೇ ಅಭಿವೃದ್ಧಿಯೆಂದು ವಾದಿಸುವ ಪ್ರಉತವಾದಿಗಳು. ಪ್ರಗತಿಶೀಲ ಉಪಯೋಗ ತತ್ವ (ಪ್ರಉತ)ದನ್ವಯ ಬಂಡವಾಳವಾದ ಮತ್ತು ಕಮ್ಯುನಿಸಂಗಳೆರಡೂ ಒಂದೇ ನಾಣ್ಯದ ಎರಡು ಮುಖಗಳು. ಇವೆರಡೂ ಭೌತವಾದಿ ಸಿದ್ಧಾಂತಗಳು. ಮಾನವನ ಅಸ್ತಿತ್ವದ ಸಮಗ್ರತೆಯನ್ನು ಪರಿಗಣಿಸದ ಕೇಂದ್ರೀಕೃತ ಅರ್ಥವ್ಯವಸ್ಥೆಯ ಚಿಂತನೆಗಳು. ಕಮ್ಯುನಿಸಂ ಈ ಜಗತ್ತಿನಿಂದಲೇ ಮಾಯವಾಗಲಿದೆ (ಇದಾಗಲೇ ನಿಜವಾಗಿದೆ) ಬಂಡವಾಳವಾದವು ಪಟಾಕಿಯ ರೀತಿಯಲ್ಲಿ ಸಿಡಿದು ನಿಶ್ಯೇಷವಾಗಲಿದೆ (ನಿಜವಾಗುವ ದಾರಿಯಲ್ಲಿದೆ) ಎಂದು ಪ್ರಉತವಾದಿಗಳು ವಾದಿಸುತ್ತಿದ್ದರು. ಪ್ರಉತ ಎಂಬುದು ಆನಂದ ಮಾರ್ಗ ಸಿದ್ಧಾಂತದ ಒಂದು ಭಾಗ ಮಾತ್ರ. ಆನಂದ ಮಾರ್ಗದ ಕುರಿತು ಹಲವು ವಿಧದ ಅಪಪ್ರಚಾರಗಳು ತಾರಕಕ್ಕೇರಿದ ಸಂದರ್ಭವದು. ಕಾಲೇಜಿನ ಚರ್ಚಾಗೋಷ್ಠಿಗಳಲ್ಲಿ, ಹಾಸ್ಟೆಲ್‍ಗಳಲ್ಲಿ ನಡೆಯುತ್ತಿದ್ದ ಚರ್ಚೆಯ ಸಂದರ್ಭಗಳಲ್ಲಿ ಮೂರು ಸಿದ್ಧಾಂತಗಳ ಅನುಯಾಯಿಗಳು ಒಟ್ಟಿಗೇ ಕುಳಿತು ತಮ್ಮ ತಮ್ಮ ವಿಚಾರಧಾರೆಯನ್ನು ಪ್ರಕಟಿಸುತ್ತಿದ್ದರು. ಆಗಿನ್ನೂ ಪ್ರಾರಂಭವಾಗಿದ್ದ, ಕಮ್ಯುನಿಸಂನ ಉಗ್ರರೂಪವಾದ ನಕ್ಸಲ್‍ವಾದದ ಕುರಿತೂ ಬಹಿರಂಗ ಚರ್ಚೆಯಾಗುತ್ತಿತ್ತು. ಆದರೆ ಈ ಸೈದ್ಧಾಂತಿಕ ಒಲವುಗಳು, ವಿದ್ಯಾರ್ಥಿಗಳ ಅಧ್ಯಯನ ಅಥವಾ ವೈಯಕ್ತಿಕ ಸಂಬಂಧಗಳಿಗೆ ತೊಡಕಾಗಿದ್ದನ್ನು ನಾನು ಕಾಣಲಿಲ್ಲ. ಪ್ರಉತದ ಅನುಯಾಯಿಯಾಗಿದ್ದ ನನ್ನ ಸ್ನೇಹಿತರ ಬಳಗದಲ್ಲಿ ಕಟ್ಟಾ ಎಡಪಂಥೀಯರೂ ಇದ್ದರು. ಬಲಪಂಥೀಯರೂ ಇದ್ದರು. ಗುಂಪು ಅಧ್ಯಯನ ನಡೆಸುವಾಗ, ಗ್ರಂಥಾಲಯ ಬಳಸುವಾಗ ಪುಸ್ತಕ, ನೋಟ್ಸ್‍ಗಳನ್ನು ವಿನಿಮಯ ಮಾಡಿಕೊಳ್ಳುವಂತಹ ಯಾವ ಸಂದರ್ಭದಲ್ಲೂ ಈ ಸೈದ್ಧಾಂತಿಕ ಅಭಿಪ್ರಾಯ ಬೇಧ ನಮ್ಮನ್ನು ಕಾಡಲಿಲ್ಲ. ಅಂದಿನ ದಿನಗಳಲ್ಲಿ ಲಿಖಿತ ರೂಪದಲ್ಲಿ ಅಭಿಪ್ರಾಯ ವ್ಯಕ್ತಪಡಿಸಲು ಸೈಕ್ಲೋಸ್ಟೈಲ್ ಮಾಡಿ ಹಂಚುವುದೇ ಸುಲಭದ ದಾರಿಯಾಗಿತ್ತು. ಅವರವರ ಅಭಿಪ್ರಾಯಗಳನ್ನು ಲಿಖಿತ ರೂಪದಲ್ಲಿ , ಹಾಸ್ಟೆಲ್ ವಾಸಿಗಳ ರೂಂಗಳಿಗೆ ತಲುಪಿಸಲಾಗಿತ್ತಿತ್ತು. ಇಷ್ಟ ಇದ್ದವರು ಓದುತ್ತಿದ್ದರು. ಆದರೆ ಯಾರದೂ ತಕರಾರು ಇರಲಿಲ್ಲ. ಇಂತಹುದೇ ಸನ್ನಿವೇಶ ಇತರ ಹಲವು ವಿಶ್ವವಿದ್ಯಾಲಯಗಳ ಕ್ಯಾಂಪಸ್‍ನಲ್ಲಿದ್ದವು. ಇದರರ್ಥ ಅಂದಿನ ವಿದ್ಯಾರ್ಥಿಗಳು ಪ್ರತಿಭಟಿಸುತ್ತಲೇ ಇರಲಿಲ್ಲವೆಂದಲ್ಲ. ಪ್ರತ್ಯೇಕ ತೆಲಂಗಾಣಕ್ಕಾಗಿ ನಡೆದ ಹೋರಾಟದಲ್ಲಿ ವಿದ್ಯಾರ್ಥಿಗಳು ಬಹುದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರಿಂದಾಗಿ 1970-71 ರಲ್ಲಿ ಆಂಧ್ರಪ್ರದೇಶದ ಹಲವಾರು ಕಾಲೇಜುಗಳನ್ನು ಸುಮಾರು ಐದಾರು ತಿಂಗಳುಗಳ ಕಾಲ ಮುಚ್ಚಲಾಗಿತ್ತು. 1972-73 ರಲ್ಲಿ ಕೂಡಾ ಈ ಹೋರಾಟದ ಬಿಸಿಯನ್ನು ಮೂರು ತಿಂಗಳುಗಳ ಕಾಲ ವಿದ್ಯಾರ್ಥಿಗಳು ಅನುಭವಿಸಿದರು. ವಿಶೇಷವೆಂದರೆ, ಈ ಹೋರಾಟದಲ್ಲಿ ಧುಮಕಿದವರ ನಡುವಿನ ಸೈದ್ಧಾಂತಿಕ ನಿಲುವುಗಳು ಹೋರಾಟಕ್ಕೆ ಅಡ್ಡಿಯಾಗಲಿಲ್ಲ. ವಿದ್ಯಾರ್ಥಿಗಳ ನಡುವೆ ನಡೆಯುತ್ತಿದ್ದ ಸಂಘರ್ಷಗಳು ವೈಯಕ್ತಿಕ ನೆಲೆಯಲ್ಲಿ ಇರುತ್ತಿದ್ದವು. ಕಾಲೇಜು, ವಿಶ್ವವಿದ್ಯಾಲಯಗಳ ಚುನಾವಣೆಯಲ್ಲಿ ವ್ಯಕ್ತಿ ಕೇಂದ್ರಿತವಾಗಿದ್ದು, ರಾಜಕೀಯ ಪಕ್ಷಗಳ ಒಲವು, ಬೆಂಬಲ ಇರುತ್ತಲೇ ಇರಲಿಲ್ಲ. ಇಡೀ ಭಾರತದ ವಿದ್ಯಾರ್ಥಿಗಳು ದೊಡ್ಡ ಪ್ರಮಾಣದಲ್ಲಿ ಹೋರಾಟದಲ್ಲಿ ಪಾಲ್ಗೊಂಡಿದ್ದು 1974 ರ ಜೆ.ಪಿ.ಚಳುವಳಿಯಲ್ಲಿ. ಉತ್ತರ ಭಾರತದಲ್ಲಿ ತೀವ್ರವಾಗಿದ್ದ ಜೆಪಿ ಚಳುವಳಿಯಲ್ಲಿ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಅಂದಿನ ರಾಜಕೀಯ ಧುರೀಣರ ಕಣ್ಣು ಕೆಂಪಗಾಗಿಸಲು ಕಾರಣವೆಂದರೆ ಅಧಿಕಾರದ ಗದ್ದುಗೆಯನ್ನು ಅಲುಗಾಡಿಸುವ, ಬದಲಿಸುವ ಹೋರಾಟ ಅದಾಗಿತ್ತು. ಇಂದಿನ ಬಹಳಷ್ಟು ರಾಜಕೀಯ ಧುರೀಣರು ವಿದ್ಯಾರ್ಥಿ ದಿಸೆಯಲ್ಲಿ ಅಂದಿನ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಜೆಪಿ ಆಂದೋಲನದ ಪರಿಣಾಮದಿಂದ 1975 ರ ತುರ್ತು ಪರಿಸ್ಥಿತಿ, 1977ರಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದ್ದು ಈಗ ಇತಿಹಾಸ. ವಿದ್ಯಾರ್ಥಿ ಶಕ್ತಿಯನ್ನು ಗಮನಿಸಿದ ರಾಜಕೀಯ ಪಕ್ಷಗಳು, ಕ್ಯಾಂಪಸ್‍ನಲ್ಲಿ ಬೇರೂರುವ ಪ್ರಯತ್ನ ನಡೆಸಿದವು. ವಿದ್ಯಾರ್ಥಿ ಸಂಘದ ಚುನಾವಣೆಗಳಿಗೆ ರಾಜಕಾರಣಿಗಳ ಬೆಂಬಲ ದೊರಕತೊಡಗಿ, ಹಣದ ತೊರೆಯೂ ಹರಿಯ ತೊಡಗಿ, ವಿದ್ಯಾರ್ಥಿಗಳಿಗೂ ಭ್ರಷ್ಟಾಚಾರದ ರುಚಿ ತೋರಿಸುವ ಪ್ರಕ್ರಿಯೆ ಕಾಲೂರ ತೊಡಗಿತು. ಸೈದ್ಧಾಂತಿಕ ನೆಲೆಗಟ್ಟಿನ ಮೇಲೆ ನಡೆಯುತ್ತಿದ್ದ ಚರ್ಚೆಗಳ ಸ್ಥಾನವನ್ನು ರಾಜಕೀಯ ಪಕ್ಷಗಳ ಒಲವು ಆಕ್ರಮಿಸತೊಡಗಿತು. ವಿದ್ಯಾರ್ಥಿ ಸಂಘಟನೆಗಳು ನೇರವಾಗಿ ರಾಜಕೀಯ ಪಕ್ಷದೊಂದಿಗೆ ಗುರ್ತಿಸಿಕೊಳ್ಳತೊಡಗಿದವು. ಈ ಅಧಃಪತನಕ್ಕೆ ಯಾವುದೇ ಒಂದು ರಾಜಕೀಯ ಪಕ್ಷವನ್ನೂ ದೋಷಿಯಾಗಿಸುವುದು ಅಸಮಂಜಸ. ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವಲ್ಲಿ ಎಲ್ಲ ರಾಜಕೀಯ ಪಕ್ಷಗಳೂ ಸಮಾನದೋಷಿಗಳು. ರಾಜಕಾರಣಿಗಳ ಅಧಿಕಾರ ದಾಹದ ದಾಳಕ್ಕೆ ವಿದ್ಯಾರ್ಥಿ ಸಮುದಾಯ ಕ್ರಮೇಣ ಬಲಿಯಾಗಿ ಇಂದಿಗೂ ಆ ಬಲೆಯಲ್ಲಿ ಸಿಲುಕಿದೆ. ಸಿದ್ಧಾಂತದ ಸ್ಥಾನವನ್ನು ಭಾವನಾತ್ಮಕ ಅಂಶಗಳು, ವಿನಾಕಾರಣದ ದ್ವೇಷ, ಅಸೂಯೆಗಳು ಆಕ್ರಮಿಸಿವೆ. ಎಡಪಂಥೀಯ ಚಿಂತನೆಯ ನೆಪದಲ್ಲಿ ವಿದ್ಯಾರ್ಥಿಗಳಲ್ಲಿ ದ್ವೇಷ ಹುಟ್ಟಿಸುವ ಕೆಲಸವನ್ನು ಕಮ್ಯುನಿಸ್ಟ್ ಪಕ್ಷಗಳು ಮಾಡುತ್ತಿವೆ. ಜಾತಿ, ಮತ, ಪಂಥ, ಹುಸಿ ದೇಶಾಭಿಮಾನಗಳನ್ನು ವಿದ್ಯಾರ್ಥಿಗಳ ಭಾವನೆ ಕೆರಳಿಸಲು ಬಲಪಂಥೀಯ ಪಕ್ಷಗಳು ಬಳಸುತ್ತಿವೆ. ವಿಶ್ವವಿದ್ಯಾಲಯಗಳು ಮಾತ್ರವಲ್ಲ, ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಕೂಡಾ ವಿಭಜಕ ಕ್ರಮಗಳು ಕಾಲೂರಿವೆ. ವಿದ್ಯಾರ್ಥಿ ಶಕ್ತಿಯ ಅರಿವುಳ್ಳ ಇಂದಿನ ರಾಜಕಾರಣಿಗಳು ತಮ್ಮ ಪಕ್ಷ ಅಥವಾ ತಮಗೆ ವಿದ್ಯಾಸಂಸ್ಥೆಗಳಲ್ಲಿ ಕಾಲೂರುವ ಅವಕಾಶ ಸಿಗದಿದ್ದಾಗ ಗುಂಡಾಗಿರಿಗೆ ಕುಮ್ಮಕ್ಕು ನೀಡುವ ನೀಚ ಕೆಲಸಕ್ಕೂ ಮುಂದಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶ್ಲೇಷಿಸಿದಾಗ ಜೆಎನ್‍ಯುದಲ್ಲಿ ನಡೆಯುತ್ತಿರುವ ಘಟನೆಗಳಿಗೆ ಕಾರಣ ಸ್ಪಷ್ಟವಾಗುತ್ತದೆ. ಜಾಗತಿಕ ಪ್ರತಿಷ್ಠೆ ಪಡೆದಿರುವ ಭಾರತದ ಕೆಲವೇ ವಿಶ್ವವಿದ್ಯಾಲಯಗಳಲ್ಲಿ ಜೆಎನ್‍ಯು ಕೂಡಾ ಸೇರಿದೆ. ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ, ಸಂಶೋಧನೆಯಲ್ಲಿ ಆಸಕ್ತಿ ಹುಟ್ಟಿಸುವಲ್ಲಿ ಜೆಎನ್‍ಯು ತನ್ನ ಛಾಪು ಮೂಡಿಸಿದೆ. ಮುಕ್ತ ಚಿಂತನೆಗೆ ಅಲ್ಲಿ ಸಾಕಷ್ಟು ಅವಕಾಶ ಇರುವುದರಿಂದ ಬಲಪಂಥೀಯರನ್ನು ಹಿಂದಿಕ್ಕಿ, ಎಡ ಪಂಥೀಯರು ವಿದ್ಯಾರ್ಥಿಗಳ ಒಲವು ಗಳಿಸುತ್ತಿದ್ದಾರೆ. ಅಭಿಪ್ರಾಯ ಭೇದ, ಭಿನ್ನ ಮತಗಳನ್ನು ಒಪ್ಪಲು ಸಿದ್ಧರಿಲ್ಲದ ಮತೀಯವಾದಿ ಬಲ ಪಂಥೀಯರಿಗೆ ಇದು ಸಹ್ಯವಾಗುತ್ತಿಲ್ಲ. ತಮ್ಮ ಅಭಿಪ್ರಾಯಗಳನ್ನು ಒಪ್ಪದವರನ್ನು ದೇಶದ್ರೋಹಿಗಳೆಂದು ಕರೆಯಲೂ ಹೇಸದ, ದ್ವೇಷದ ಗೋಡೆಗಳ ನಡುವೆ ತಮ್ಮ ಬುದ್ದಿಯನ್ನೇ ಬಂಧಿಸಿಟ್ಟಿರುವ ಜಡವಾದೀ ಚಿಂತಕರು ವಿಶ್ವವಿದ್ಯಾಲಯದಲ್ಲಿ ಪ್ರಾರಂಭವಾಗಿರುವ ಪ್ರತಿಭಟನೆಯನ್ನು ಹಿಂಸಾಚಾರಕ್ಕೆ ತಿರುಗಿಸುತ್ತಿದ್ದಾರೆ. ನಮ್ಮ ಶಿಕ್ಷಣ ಪದ್ಧತಿ, ಸಾಮಾಜಿಕ- ಆರ್ಥಿಕ ವ್ಯವಸ್ಥೆಗಳೂ ವಿಶ್ವವಿದ್ಯಾಲಯಗಳ ಇಂದಿನ ದುಃಸ್ಥಿತಿಯ ಕಾರಣಗಳು. ಪೂರ್ವ ಪ್ರಾಥಮಿಕ ಹಂತದಿಂದ ಸ್ನಾತಕೋತ್ತರದವರೆಗೂ ವಿದ್ಯಾರ್ಥಿಗಳ ತಲೆಯಲ್ಲಿ ವಿಷಯಗಳನ್ನು ತುರುಕುವುದೇ ಇಂದಿನ ಶಿಕ್ಷಣ. ಕೆಲವೆಡೆ ತಾವು ಭಿನ್ನವಾಗಿ ಕಲಿಸುತ್ತಿದ್ದೇವೆಂದು ತೋರಿಸಿಕೊಳ್ಳುತ್ತಾರೆ. ಆದರೆ ಭಾರತದ ಇಂದಿನ ಶಿಕ್ಷಣ ವ್ಯವಸ್ಥೆ ಬ್ರಿಟಿಷರು ರೂಪಿಸಿದ ಗುಲಾಮಗಿರಿ ಶಿಕ್ಷಣದ ಮುಂದುವರಿಕೆಯೇ ಆಗಿದೆ. ಕಂದುಚರ್ಮದ ಭಾರತೀಯರಲ್ಲಿ ಒಂದಷ್ಟು ಮೇಲರಿಮೆ ಬೆಳೆಸಿ, ಜನಸಾಮಾನ್ಯರಿಂದ ಪ್ರತ್ಯೇಕಿಸಿ, ಬ್ರಿಟಿಷರ ಗುಲಾಮಗಿರಿ ಮಾಡುವುದನ್ನು ಅಂದು ಕಲಿಸಲಾಗುತ್ತಿತ್ತು. ಬ್ರಿಟಿಷರ ಸ್ಥಾನವನ್ನು ಬಂಡವಾಳಶಾಹಿಗಳಿಗೆ ನೀಡಿರುವುದಷ್ಟೇ ಇಂದಿನ ಬದಲಾವಣೆ. ವಿದ್ಯಾಭ್ಯಾಸ ಮಾಡುವ ಉದ್ದೇಶವೇ ನೌಕರಿ ಪಡೆಯುವುದು; ಬಂಡವಾಳಶಾಹಿಗಳೇ ಉದ್ಯೋಗದಾತರು, ಅವರಿಂದಲೇ ಉದ್ಯೋಗ ಸೃಷ್ಟಿಯೆಂಬ ಮಿಥ್ಯೆಯನ್ನು ವಿದ್ಯಾರ್ಥಿಗಳಲ್ಲಿ ತುಂಬಲಾಗುತ್ತಿದೆ. ಇದರಿಂದಾಗಿ ಪದವಿ ಪಡೆದೊಡನೆ ನೌಕರಿ ಸಿಗಬೇಕೆಂಬ ನಿರೀಕ್ಷೆ ವಿದ್ಯಾರ್ಥಿಗಳಲ್ಲಿದೆ. ಪದವಿ ಪಡೆದು ವರ್ಷಾನುಗಟ್ಟಲೇ ಕಾದರೂ ನೌಕರಿ ಸಿಗದಾಗ ಪದವೀಧರರಲ್ಲಿ ಮಾತ್ರವಲ್ಲ, ವಿದ್ಯಾರ್ಥಿಗಳಲ್ಲೂ ಸಿನಿಕತೆ ಬೆಳೆಯುತ್ತದೆ. ಇದರ ಪರಿಣಾಮವೇ ವಿದ್ಯಾರ್ಥಿ ಮತ್ತು ಯುವಕರಲ್ಲಿ ಅಶಿಸ್ತು , ನಿರಾಶಾವಾದ, ಉದ್ಯೋಗ ಅವಕಾಶ ದೊರಕಿದವರ ಕುರಿತಾದ ಅನಗತ್ಯ ದ್ವೇಷ ಬೆಳೆಯುತ್ತಿದೆ. ಇಂದಿನ ಬಹಳಷ್ಟು ವಿಶ್ವವಿದ್ಯಾಲಯಗಳ ಸಿಲೆಬಸ್‍ಗಳು ಉದ್ಯೋಗಾರ್ಹತೆಯನ್ನು ಬೆಳೆಸುವ ಬದಲಿಗೆ ಅದೇ ಹಳೆಯ ನಿರುಪಯುಕ್ತ ಪಾಠಗಳನ್ನು ಹೇಳುತ್ತಿವೆ. ಸರ್ಕಾರದ ಅನುದಾನಿತ ಶಾಲಾ, ಕಾಲೇಜುಗಳ ಶಿಕ್ಷಕರಲ್ಲಿ ಹೆಚ್ಚಿನವರಿಗೆ ಅಧ್ಯಾಪನ, ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆ ಮೂಡಿಸುವದರಲ್ಲಿ ಆಸಕ್ತಿಯೇ ಇಲ್ಲವಾಗಿದೆ. ಅವರು ವಿದ್ಯಾರ್ಥಿಗಳಿದ್ದಾಗ ಕಲಿತ ವಿಷಯಗಳೇ ದಶಮಾನಗಳ ನಂತರವೂ ಇರುವುದರಿಂದ ತಮ್ಮ ಹಳೆಯ ಟಿಪ್ಪಣಿ, ನೋಟ್ಸ್‍ಗಳನ್ನೇ ಬಳಸಿ, ಕಾಟಾಚಾರದ ಪಾಠ ಮಾಡಿ ತೃಪ್ತರಾಗುತ್ತಾರೆ. ಯಾಕೆಂದರೆ ಅವರು ಮಾಡುವ ಪಾಠದ ಗುಣಮಟ್ಟ, ಅವರ ನಡತೆ, ವಿದ್ಯಾರ್ಥಿಗಳಿಗೆ ಅವರ ಬದುಕಿನ ಸಂದೇಶ ಏನೇ ಇದ್ದರೂ ಪ್ರತಿ ತಿಂಗಳು ಸಂಬಳ ತಪ್ಪುವುದಿಲ್ಲ. ವಿದ್ಯಾರ್ಥಿಗಳಲ್ಲಿ ಸ್ವಾವಲಂಬನಾ ಮನೋಭಾವ ಬೆಳೆಸುವ, ಇತರರ ಕುರಿತಾಗಿ ಪ್ರೀತಿ ಬೆಳೆಸುವ, ಸಹನೆ ಮೂಡಿಸುವ, ಶಿಕ್ಷಣ ವಿಧಾನವೇ ನಮ್ಮಲ್ಲಿ ಇಲ್ಲ. ಇದು ಸ್ಪರ್ಧಾತ್ಮಕ ಜಗತ್ತು ಎಂದೇ ವಿದ್ಯಾರ್ಥಿಗಳಲ್ಲಿ ತಲೆಯಲ್ಲಿ ತುಂಬುತ್ತಾರೆಯೇ ಹೊರತು ಇದು ಸಹಕಾರಾತ್ಮಕ ಜಗತ್ತು ಎಂಬುದನ್ನೇ ಕಲಿಸುವುದಿಲ್ಲ. ಇನ್ನೊಬ್ಬರನ್ನು ನಮ್ಮ ಅವಕಾಶಗಳನ್ನು ಕಸಿಯುವ ಪ್ರತಿಸ್ಪರ್ಧಿ ಎಂದೇ ಪರಿಗಣಿಸಲು ಕಲಿಸುತ್ತಿದ್ದೇನೆ. ವಿದ್ಯಾರ್ಥಿಗಳಲ್ಲಿ ಅಶಿಸ್ತನ್ನು ಗಮನಿಸಿ, ಪ್ರತಿಭಟನೆಗಳಲ್ಲಿ ಅವರು ಪಾಲ್ಗೊಳ್ಳುವುದನ್ನು ನೋಡಿದ ಹಲವರು ಶಿಕ್ಷಣಕ್ಕಾಗಿ ಸರ್ಕಾರ ವೆಚ್ಚ ಮಾಡುವುದನ್ನು ನಿಲ್ಲಿಸಬೇಕೆಂಬ ವಾದ ಮುಂದಿಡುತ್ತಾರೆ. ಅಮೇರಿಕಾ ಮತ್ತು ಇತರ ಹಲವು ದೇಶಗಳಲ್ಲಿ ಇರುವಂತೆ ಕಾಲೇಜು ಶಿಕ್ಷಣದ ವೆಚ್ಚವನ್ನು ವಿದ್ಯಾರ್ಥಿಯೇ ಭರಿಸುವ ಪದ್ಧತಿ ಬರಬೇಕೆಂದು ಸೂಚಿಸುತ್ತಾರೆ. ಆದರೆ ಇಂತಹ ವ್ಯವಸ್ಥೆ ಜಾರಿಗೆ ಬರುವ ಮೊದಲು, ಪಾಲಕರು ಅಥವಾ ವಿದ್ಯಾರ್ಥಿಗೆ ಉದ್ಯೋಗಾವಕಾಶದ ಭದ್ರತೆ ಇರಬೇಕೆಂದು ಅವರು ಯೋಚಿಸುವುದಿಲ್ಲ. ಬೌದ್ಧಿಕ ಶ್ರಮ ಮಾತ್ರ ಶ್ರೇಷ್ಠ, ದೈಹಿಕ ಶ್ರಮ ಕನಿಷ್ಠ ಎಂದು ತಪ್ಪಾಗಿ ಭಾವಿಸಿರುವ ನಮ್ಮ ಸಮಾಜದ ನಂಬಿಕೆ ಬದಲಾಗಬೇಕೆಂದು ಅವರಿಗೆ ಅನಿಸುವುದಿಲ್ಲ. ವ್ಯಕ್ತಿಯ ವಿದ್ಯಾಭ್ಯಾಸದ ಹೊಣೆಯನ್ನು ಸಮಾಜ ಅಥವಾ ಸರ್ಕಾರ ಹೊರದಿದ್ದರೆ, ಆ ವ್ಯಕ್ತಿಯಿಂದ ಸಾಮಾಜಿಕ ಹೊಣೆಗಾರಿಕೆಯನ್ನು ನಿರೀಕ್ಷಿಸುವ ಹಕ್ಕು ನಮಗೆ ಇದೆಯೇ? ಎಂದು ಚಿಂತಿಸಬೇಕಾಗುತ್ತದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಬಸ್ ಪಾಸ್ ನೀಡಿಕೆಯನ್ನು ನಾಗರಿಕರು ಅವಹೇಳನ ಮಾಡುವುದನ್ನು ಕಂಡಾಗ, ಬಸ್ ಕಂಡಕ್ಟರ್ (ಬಹುಶಃ ಅವರೂ ಇದರ ಲಾಭ ಪಡೆದಿರಬಹುದು) ಪಾಸ್ ಹೊಂದಿದ ವಿದ್ಯಾರ್ಥಿಗಳನ್ನು ತಿರಸ್ಕಾರದಿಂದ ನೋಡಿದಾಗ, ಸಮಾಜದ ಕುರಿತು ಒಳ್ಳೆಯ ಭಾವನೆ ಅವರಲ್ಲಿ ಮೂಡಲು ಸಾಧ್ಯವೇ? ಎಂಬ ಕುರಿತು ಆತ್ಮವಿಮರ್ಶೆ ಮಾಡಿಕೊಳ್ಳುವುದು ಉತ್ತಮ. ಅಧಿಕಾರ ಗಳಿಸುವುದು, ಅದರಿಂದ ಸಂಪತ್ತು ಗಳಿಸುವುದನ್ನೇ ಗುರಿಯಾಗಿಸಿಕೊಂಡಿರುವ ರಾಜಕಾರಣಿಗಳಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಪರಿವರ್ತನೆಯಾದೀತು, ವಿದ್ಯಾರ್ಥಿಗಳು ವಿದ್ಯಾರ್ಜನೆಯಲ್ಲೇ ತೊಡಗುವಂತಾದೀತೆಂದು ನಿರೀಕ್ಷಿಸುವುದು ವ್ಯರ್ಥ. ಸಮಾಜದ ಹಿತ ಚಿಂತಕರು , ಶಿಕ್ಷಣ ತಜ್ಞರು , ಮಾನವ ಪ್ರೇಮಿಗಳು ಮುಂದಾಗಿ ಒತ್ತಡ ಸೃಷ್ಟಿಸಿದಾಗ ಪರಿವರ್ತನೆಯ ಬೆಳಕು ಕಂಡೀತು. ಎಂತಹ ಶಿಕ್ಷಣ ಪದ್ಧತಿ ಬೇಕೆಂಬ ಕುರಿತು ಸಮರ್ಪಕ ತಿಳುವಳಿಕೆ ಇದ್ದಾಗ ಮಾತ್ರ ಸರಿಯಾದ ಶಿಕ್ಷಣ ಪದ್ಧತಿಯ ಅನುಷ್ಠಾನವಾಗುತ್ತದೆ. ತನ್ನನ್ನು ಈ ಬೃಹತ್ ವಿಶ್ವದ ಒಂದು ಭಾಗ, ಸಕಲ ಜೀವರಾಶಿಗಳ ಒಂದು ಕೊಂಡಿ ಎಂದು ಮಗು ಭಾವಿಸತೊಡಗಿದಾಗ ಜೀವನದ ದೃಷ್ಟಿಕೋನವೇ ಬದಲಾಗುತ್ತದೆ. ಪೂರ್ವ ಪ್ರಾಥಮಿಕ ಹಂತದಲ್ಲಿಯೇ ಮಕ್ಕಳ ಮನಸ್ಸನ್ನು ವಿಸ್ತಾರಗೊಳಿಸುವ ಶಿಕ್ಷಣ ನೀತಿಯನ್ನು ಪ್ರಾರಂಭಿಸುವುದು ಸೂಕ್ತ. ಯಾಕೆಂದರೆ ಆ ಹಂತದಲ್ಲಿಯೇ ಮಗು ಸರಿಯಾದ ರೀತಿಯಲ್ಲಿ ಯೋಚಿಸುವ ಸಾಮಥ್ರ್ಯ ಹೊಂದಿರುತ್ತದೆ. ಬಾಲ್ಯದಲ್ಲಿಯೇ ಯೋಗ, ಧ್ಯಾನಗಳನ್ನು ಕಲಿತ ಮಗು ಬೆಳೆದಾಗ ಜಾತಿ, ಮತ, ಪಂಥಗಳ ಸಂಕೋಲೆಯಲ್ಲಿ ಸಿಲುಕಿ ಬೀಳುವುದಿಲ್ಲ. ಈ ಪ್ರಪಂಚದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಇಲ್ಲಿನ ನೈಸರ್ಗಿಕ ಸಂಪನ್ಮೂಲಗಳು ಎಲ್ಲರ ಬಳಕೆಗಾಗಿ ಇವೆ. ಇದು ಕೆಲವರದೇ ಸ್ವತ್ತಾಗುವುದು ನಿಸರ್ಗ ವಿರೋಧಿ ಕ್ರಮ; ಸಹಕಾರವೇ ಪ್ರಕೃತಿಯ

ಪ್ರಸ್ತುತ Read Post »

ಕಾವ್ಯಯಾನ

ಕಾವ್ಯಯಾನ

ಗ್ರಹಣಕ್ಕೆ ಮುನ್ನ ಪ್ರಮಿಳಾ ಎಸ್.ಪಿ ಗ್ರಹಣಕ್ಕೆ ಮುನ್ನ ಕೋಣೆ ಕಿಟಕಿಯ ಸರಳುಗಳ ನಡುವೆ ಚಂದ್ರಮನ ಚಿತ್ರ ಮನದಲ್ಲಿ ಆತುರದ ಕಾವು… ಗ್ರಹಣ ಪ್ರಾರಂಭ ಆಗುವುದಕ್ಕೆ ಮುನ್ನ ಮನೆ ಮಂದಿಗೆಲ್ಲಾ ಊಟ ಬಡಿಸಬೇಕಿದೆ.. ಎದೆಯೊಳಗಿನ ನೋವುಗಳ ಬಚ್ಚಿಟ್ಟು…ಪರದೆ ಮುಂದೆ ಕುಳಿತು ಪುಂಗಿ ಮಾತು ಆಲಿಸಿ ಆಕಳಿಸುವ ಅರಮನೆಯ ಮನಸ್ಸುಗಳ ನಡುವೆ ಆತುರಕ್ಕೆ ಆಟ ವಾಡ ಬೇಕಿದೆ ನಾನು… ಬಳಲಿದ ಕಾಲುಗಳ… ಮೇಲೆ ನಿಂತು ನಿಟ್ಟುಸಿರು ಸೆರಗು ಸುತ್ತಿ ಪ್ರತಿ ಕ್ಷಣಕ್ಕೂ ಬೇಡುತಿದ್ದೇನೆ ಹೊರಗೆ ಹೋದವರು ಹುಷಾರಾಗಿ ವಪಸ್ಸಾಗಲಿ.. ಪರದೆಯಲ್ಲಿ ಕಂಡ ರಾಶಿ ಭವಿಷ್ಯ ದ ಮಾತುಗಳು ಮಂಕಾಗಲಿ… ಅವನಿತ್ತ ಆಯಸ್ಸು ಇಮ್ಮಡಿಗೊಳ್ಳಲಿ .. ಕರುಳಕುಡಿಗಳಿಗೆ ಮಂತ್ರದ ಸೋಕು ತಾಗದಿರಲೆಂದು… ಬಡಿಸಬೇಕಿದೆ ಅನ್ನ ಗ್ರಹಣ ಕ್ಕೆ ಮುನ್ನ… ******

ಕಾವ್ಯಯಾನ Read Post »

ಇತರೆ

ಶ್ರದ್ದಾಂಜಲಿ

ನಮ್ಮನ್ನಗಲಿದ ಸಾಹಿತಿ, ಸಂಶೋಧಕ, ಪ್ರೋ. ಎಂ.ಚಿದಾನಂದಮರ್ತಿ..! ಕೆ.ಶಿವು ಲಕ್ಕಣ್ಣವರ ಪ್ರೋ. ಎಂ.ಚಿದಾನಂದಮರ್ತಿ..! ಸಾಹಿತಿ, ಸಂಶೋಧಕ ಪ್ರೋ. ಎಂ.ಚಿದಾನಂದಮೂರ್ತಿ ಅವರ ಬಗೆಗೆ ಇತ್ತೀಚಿನ ಎಡಪಂಥೀಯರ ಏನೇ ತಕರಾರಿದ್ದರು. ಅದನ್ನೆಲ್ಲ ಬದಿಗಿರಿಸಿ ಅವರು ಕೊನೆ ಉಸಿರೆಳದ ಈ ಗಳಿಗೆಯಲ್ಲಿ ಅವರ ಕುರಿತು ಈ ಪುಟ್ಟ ಲೇಖನ ಸ್ಮರಣೆ… ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಸಂಶೋಧಕ, ಪ್ರೋಫೆಸರ್​ ಚಿದಾನಂದ ಮೂರ್ತಿಯವರು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇವತ್ತು ಬೆಳಗಿನ ಜಾವ 3.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು… ನಾಡಿನ ಹಿರಿಯ ಸಾಹಿತಿ, ಇತಿಹಾಸಜ್ಞ, ಹೋರಾಟಗಾರ, ವಿಶೇಷವಾಗಿ ಹಂಪೆಯ ಜೊತೆ ಬಹಳ ಆಪ್ತತೆ ಬೆಳೆಸಿಕೊಂಡಿದ್ದ, ಕನ್ನಡ ನಾಡಿನ ನೆಲ-ಜಲ-ಭಾಷೆ-ಸಂಸ್ಕೃತಿಯ ಕಾವಲುಗಾರನಾಗಿ ತನ್ನ ಜೀವನವನ್ನೇ ಮುಡುಪಾಗಿಟ್ಟದ್ದರು ಎಂ. ಚಿದಾನಂದಮೂರ್ತಿಯವರು… ಇಂದು ನಿಧನರಾದ ಹಿರಿಯ ಸಂಶೋಧಕ, ವಿದ್ವಾಂಸ, ಬರಹಗಾರ ಡಾ. ಎಂ.ಚಿದಾನಂದಮೂರ್ತಿ ಅವರು 1931ರ ಮೇ 10ರಂದು ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೆಕೋಗಲೂರಿನಲ್ಲಿ ಜನಿಸಿದ್ದರು. ಡಾ. ಎಂ.ಚಿದಾನಂದಮೂರ್ತಿ ಅವರು‌‌ ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು ಕೋಗಲೂರು, ಸಂತೆಬೆನ್ನೂರಿನಲ್ಲಿ ಪಡೆದಿದ್ದರು. ಇಂಟರ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 10ನೇ ಸ್ಥಾನಗಳಿಸಿದ್ದ ಅವರು, ಕನ್ನಡ ಆನರ್ಸ್ ಸೇರಿ 1953ರಲ್ಲಿ ಆಲ್ ಆನರ್ಸ್ ಚಿನ್ನದ ಪದಕ ಪಡೆದಿದ್ದರು… ಬಳಿಕ ಎರಡು ವರ್ಷ ಬೆಂಗಳೂರು, ತುಮಕೂರು, ಕೋಲಾರದ ಪದವಿ ಕಾಲೇಜುಗಳಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. 1957ರಲ್ಲಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ ಪದವಿಯನ್ನು ಪ್ರಥಮ ಸ್ಥಾನದಲ್ಲಿ ಪಡೆದಿದ್ದರು… ‘ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ’ ಎಂಬ ವಿಷಯದ ಮೇಲೆ ತೀ. ನಂ. ಶೀಕಂಠಯ್ಯನವರ ಮಾರ್ಗದರ್ಶನದಲ್ಲಿ 1964ರಲ್ಲಿ ಪಿ.ಎಚ್‌ಡಿ ಪದವಿ ಪಡೆದಿದ್ದರು… ವೃತ್ತಿಜೀವನದ ಆರಂಭದ ಕೆಲವು ವರ್ಷ ಪದವಿ ಕಾಲೇಜುಗಳ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದ ಚಿದಾನಂದಮೂರ್ತಿಗಳು 1957ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಯುವರಾಜ ಕಾಲೇಜಿನಲ್ಲಿ ಪ್ರಾಧ್ಯಾಪಕರಾದರು. 1960ರ ಹೊತ್ತಿಗೆ ಮೈಸೂರಿನ ಮಾನಸಗಂಗೋತ್ರಿಯ ಸ್ನಾತಕೋತ್ತರ ಕನ್ನಡ ವಿಭಾಗದ ಪ್ರಾಧ್ಯಾಪಕರಾದರು. 1968ರವರೆಗೆ ಅಲ್ಲಿ ಪ್ರಾಧ್ಯಾಪಕರಾಗಿದ್ದರು. ಬಳಿಕ ಬೆಂಗಳೂರು ವಿಶ್ವವಿದ್ಯಾಲಯ ಸೇರಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು. 1990ರ ಅಕ್ಟೋಬರ್ 10ರಂದು ಸ್ವಯಂ ನಿವೃತ್ತಿ ಪಡೆದಿದ್ದರು. ವೀರಶೈವ ಧರ್ಮ, ವಾಗರ್ಥ, ಮಧ್ಯಕಾಲೀನ ಕನ್ನಡ ಸಾಹಿತ್ಯ ಮತ್ತು ಅಸ್ಪೃಶ್ಯತೆ, ಪುರಾಣ ಸೂರ್ಯಗ್ರಹಣ ಸೇರಿ ಅನೇಕ ಕೃತಿಗಳನ್ನು ರಚಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪಂಪ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಚಿದಾನಂದಮೂರ್ತಿ ಭಾಜನರಾಗಿದ್ದರು… ಹಂಪಿ ಕನ್ನಡ ವಿಶ್ವವಿದ್ಯಾಲಯ ಸ್ಥಾಪನೆಯಲ್ಲಿ ಪ್ರಮುಖ ಪಾತ್ರದ್ದರು. ಹಂಪಿಯಲ್ಲಿ ಕನ್ನಡ ವಿಶ್ವವಿದ್ಯಾಲಯ ಸ್ಥಾಪನೆಯಾಗಬೇಕೆಂದು ಹೋರಾಟ ನಡೆಸಿದವರ ಪೈಕಿ ಚಿದಾನಂದಮೂರ್ತಿಯವರೂ ಪ್ರಮುಖರು. ಸುಮಾರು 1985ರ ಸಂದರ್ಭದಲ್ಲಿ ಸಾಹಿತಿಗಳ, ಕಲಾವಿದರ ಬಳಗದ ಮೂಲಕ ಆಗಿನ ಮುಖ್ಯಮಂತ್ರಿ, ಸಚಿವ ಸಂಪುಟ, ಶಾಸಕರ ಮೇಲೆ ಒತ್ತಡ ತಂದು ವಿಶ್ವವಿದ್ಯಾಲಯ ಸ್ಥಾಪನೆಗೆ ಓಡಾಡಿದ್ದರು… ಸಂಶೋಧನೆ, ಸಾಹಿತ್ಯ ಸೇವೆ ಜತೆ ಸಮಾಜ ಸೇವೆಯಲ್ಲೂ ಚಿದಾನಂದಮೂರ್ತಿ ಮುಂದಿದ್ದರು. ಬರ, ನೆರೆಯಂತಹ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಕಷ್ಟದಲ್ಲಿರುವವರಿಗೆ ನೆರವಾಗಿದ್ದರು. ಉದಾಹರಣೆಗೆ, 2012ರಲ್ಲಿ ರಾಜ್ಯ ತೀವ್ರವಾಗಿ ಬರ ಎದುರಿಸಿದ್ದಾಗ ‘ಬರ ಪರಿಹಾರ ನಿಧಿ ಬಳಗ’ ಸ್ಥಾಪಿಸಿ ನೆರವಾಗಿದ್ದರು. ತೀವ್ರ ಬರಪೀಡಿತ ಪ್ರದೇಶಗಳಿಗೆ ಹೋಗಿ ಮೇವು ಧಾನ್ಯ ವಿತರಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು… ಹೀಗಿದ್ದ ಸಾಹಿತಿ ಎಂ.ಚಿದಾನಂದ ಮೂರ್ತಿ ಈಗ ನಮನ್ನು ಅಗಲಿದ್ದಾರೆ. ಅವರ ಬಗೆಗೆ ಎಡ ಪಂಥೀಯರ ಏನೇ ತಕರಾರು ಇದ್ದರೂ ನಮನ್ನು ಅಗಲಿದ ಎಂ.ಚಿದಾನಂದಮೂರ್ತಿಯವರಿಗಿದೋ ನಮನಗಳು… ***********

ಶ್ರದ್ದಾಂಜಲಿ Read Post »

ಕಾವ್ಯಯಾನ

ಕಾವ್ಯಯಾನ

ನಭದ ಕೌತುಕದ ಕಡೆಗೆ ನಾರಾಯಣಸ್ವಾಮಿ ವಿ ನಭದ ಕೌತುಕದ ಕಡೆಗೆ ಮನವ್ಯಾಕೋ ಯೋಚನಲಹರಿಯ ಕಡೆಗೆ ತಿರುಗುತಿದೆ, ಅಜ್ಞಾನದಿಂದ ವಿಜ್ಞಾನದ ಕಡೆ ಸಾಗಿದ ಮನುಜ ಮತ್ತೆಕೊ ಮರಳಿ ಅಜ್ಞಾನದ ಗೂಡಿನ ಸುತ್ತ ಸುಳಿಯುತಿರುವನೆಂದು…….. ಪ್ರಕೃತಿಯ ವಿಸ್ಮಯಕ್ಕೆ ಹೆದರಿ ದೇಗುಲ-ಗೃಹಗಳ ಕದವನೆ ಮುಚ್ಚಿ,ದೂರದರ್ಶನದ ಪರದೆಯೊಳಗೆ ನಭದ ಕೌತುಕವನು ವೀಕ್ಷಣೆ ಮಾಡುತಿಹನು……. ಆಗಸದಲಿ ಘಟಿಸುವ ಸೂರ್ಯಚಂದ್ರರ ವಿಸ್ಮಯ ರೂಪವನು ಕನ್ನಡಿಯೊಳಗಿಂದ ನೋಡಬಹುದೆಂದು,ವಿಜ್ಞಾನಿಗಳು ಸಾರಿ ಸಾರಿ ಹೇಳಿದರೂ ನಂಬಲೇ ಇಲ್ಲ ವಿಜ್ಞಾನವನು…… ಟಿವಿ ಪರದೆಯೊಳಗೆ ಕುಳಿತು ಕಟ್ಟುಕಥೆ ಸಾರುವ ಮಾತಿನಮಲ್ಲರ ಭಾಷಣವು ಹುಟ್ಟಿಸಿತು ನಿನ್ನ ಮನದೊಳಗೆ ಭಯವನು ಹುಡುಕುತಲಿರುವೆ ದಬೆ೯ಗರಿಕೆಯ ಹುಲ್ಲನು….. ಭಾನಾಡಿಯಲಿ ಹಾರುವ ಹಕ್ಕಿಗೆ ಹರಿಯುತಿರುವ ಜಲಧಾರೆಗೆ ಹೊಲದೊಳಗೆ ದುಡಿಯುತಿರುವ ರೈತನಿಗೆ ಮಣ್ಣು ಹೊರುತಿರುವ ಶ್ರಮ ಜೀವಿಗೆ ತಾಕಲಿಲ್ಲವೇಕೆ ಗ್ರಹಣ ……. ಜ್ಞಾನವ ಪಡೆದು ಅಂಧಕಾರದೊಳಗೆ ಮನವನೆಟ್ಟು,ಮೂಢಚಾರಣೆಗೆ ಬೆಂಬಲವಿತ್ತು ಸಾಗುತಿರುವ ಮನುಜನೇ,ಮುಂದಿನ ಪೀಳಿಗೆಗೆ ಯಾವುದು ನಿನ್ನ ಸಂದೇಶ ?….. ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಸ್ತ್ರೀ ಹೆಜ್ಜೆ ಕವಿತಾ ಸಾರಂಗಮಠ ಸ್ತ್ರೀ ಹೆಜ್ಜೆ ಲಂಗ ದಾವಣಿ ತೊಟ್ಟ ಬಾಲೆಯರು ವಿರಳ.. ಹಿಡಿದಿದೆ ಫ್ಯಾಶನ್ನಿನ ಮರುಳ.. ಮಾಯವಾಗಿವೆ ಉದ್ದ ಜಡೆ ಮೊಗ್ಗುಗಳ.. ಕೇಶ ಕತ್ತರಿಸಿ ನಡೆಯುವರು ಸರಳ..! ಅನುಕರಣೆ ಹೆಸರಲಿ ನಡೆದಿದೆ ಅಂಧರ ಆಟ.. ತೋರುತಿದೆ ತೆಳು ಧಿರಿಸಿನಲಿ ಅವಳ ಮೈಮಾಟ.‌. ಹಗಲಿರುಳೂ ಅವಳ ಪೀಡಿಸುತ್ತಿದೆ ಕಾಮುಕರ ಕೂಟ..! ಮಾಧ್ಯಮಗಳಲ್ಲಿ ಜಾಹಿರಾತುಗಳ ದರಬಾರು.. ಮಹಿಳೆಯರ ಮನೆ-ಮನಗಳಲ್ಲಿ ಅವುಗಳದ್ದೇ ಸಂಚಾರು.. ಹೋಗುತಿರುವ ಅವಳದೇ ಮಾನಕೆ ಇಲ್ಲವೇ ಇಲ್ಲ ಕೊಂಚ ವಿಚಾರ..! *********

ಕಾವ್ಯಯಾನ Read Post »

ಇತರೆ

ಪ್ರಸ್ತುತ

16ನೇಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನ ಕಲ್ಕುಳಿ ವಿಠಲ ಹೆಗಡೆಯವರ ಅಧ್ಯಕ್ಷ ಬಾಷಣ [15:50, 1/10/2020] H C. 2: ನಮ್ಮ ಶೃಂಗೇರಿಯ ಆದಿಕವಿ ಬಾಹುಬಲಿಯನ್ನು ಸ್ಮರಿಸುತ್ತಾ ನನ್ನ ಭಾಷಣವನ್ನು ಪ್ರಾರಂಭಿಸುತ್ತಿದ್ದೇನೆ. ಜಿಲ್ಲಾ ೧೬ನೇ ಕನ್ನಡ ಸಾ ಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪದವಿಯ ಈ ಗೌರವವನ್ನು ನಾನು ಬಯಸಿರಲಿಲ್ಲ; ನಿರೀಕ್ಷಿಸಿಯೂ ಇರಲಿಲ್ಲ. ಆದರೂ ನೀವೆಲ್ಲರೂ ಪ್ರೀತಿಯಿಂದ ಈ ಗೌರವ ನೀಡಿದ್ದೀರಿ. ಇದಕ್ಕಾಗಿ ನಾನು ನಿಮಗೆಲ್ಲರಿಗೂ ಅಭಾರಿಯಾಗಿದ್ದೇನೆ.. ನಾನು ಈ ಮೊದಲು ಸ್ಮರಿಸಿದ ಬಾಹುಬಲಿ ಎಂಬ ಜೈನ ಕವಿಯು, ಶೃಂಗೇರಿಯೂ ಆಡಳಿತಕ್ಕೊಳಪಟ್ಟಿದ್ದ ಕಾರ್ಕಳದ ದೊರೆ ಭೈರವೇಂದ್ರನ ಆಸ್ಥಾನದಲ್ಲಿ ಕವಿಯಾಗಿದ್ದನೆಂದು ಇತಿಹಾಸ ಹೇಳುತ್ತದೆ. ಈತನ ಗ್ರಂಥ ‘ನಾಗಕುಮಾರ ಚರಿತೆ’ಯಲ್ಲಿ ಮುಖ್ಯವಾಗಿ ಕರ್ಮಮಾರ್ಗದ ಪ್ರಸ್ತಾಪ ಬರುತ್ತದೆ. ನನ್ನದೂ ಕರ್ಮಮಾರ್ಗವೇ. ನಮ್ಮ ನೆಲ, ಜಲ ಮತ್ತು ನಮ್ಮ ಜನರಿಗೆ ಸರ್ಕಾರದಿಂದಲೇ ಆಗಲಿ, ಇನ್ಯಾರಿಂದಲೇ ಆಗಲಿ ಸಂಕಷ್ಟ ಬಂದಾಗಲೆ ಧ್ವನಿ ಎತ್ತುವ ಕಾಯಕ ಮಾಡಿದ್ದೇನೆ. ಅಗತ್ಯ ಬಿದ್ದಾಗ ಹೋರಾಟಕ್ಕಿಳಿದಿದ್ದೇನೆ. ಇದು ನನ್ನ ಕರ್ತವ್ಯವಾಗಿದೆ. ಈ ಅಧ್ಯ ಕ್ಷ ಸ್ಥಾನವು ಈ ಹಿಂದಿನ ನನ್ನೆ ಹೋರಾಟಕ್ಕೆ ಸಂದ ಗೌರವ ಎಂದು ಭಾವಿಸಿ ದ್ದೇನೆ . ನನ್ನ ಹೋರಾಟದ ಅನುಭವ ಮತ್ತು ಚಿಂತನೆಗಳು ನನ್ನ ಕೃತಿ, ಪ್ರಬಂಧ, ಲೇಖನಗಳಲ್ಲಿ ಅಭಿವ್ಯಕ್ತಗೊಂಡಿದ್ದು, ಅವೇ ಈ ವೇದಿಕೆಯನ್ನು ತಮ್ಮೆಲ್ಲರ ಅಭಿಮಾನದ ಮೇರೆಗೆ ದೊರಕಿಸಿಕೊಟ್ಟಿತ್ತೆಂದು ಕೊಳ್ಳುತ್ತೇನೆ. ನನ್ನನ್ನು ಆಯ್ಕೆಮಾಡಿದ ಜಿಲ್ಲ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯ ಕ್ಷರು, ಪದಾಧಿಕಾರಿಗಳಿಗೆ, ಅಭಿಮಾನಿಗಳಿಗೆ, ಸ್ನೇಹಿತರಿಗೆ, ಸಮಸ್ತರಿಗೆ ಮೊದಲಿಗೆ ಅಂತರಾಳದ ನಮಸ್ಕಾರ ತಿಳಿಸುತ್ತೇನೆ. ಶೃಂಗೇರಿ ಎಂದರೆ ಹಾವು ಗರ್ಭಿಣಿ ಕಪ್ಪೆಗೆ ನೆರಳು ನೀಡಿದ ಜಾಗ. ಸೌಹಾರ್ದತೆಯ ಪರಂಪರೆಗೆ ಇದಕ್ಕಿಂತ ದೊಡ್ಡ ಉದಾಹರಣೆ ನನಗಂತೂ ಸಿಕ್ಕಿಲ್ಲ. ಈ ಕಾರಣದಿಂದ ನನಗೆ ನನ್ನೂರಿನ ಬಗ್ಗೆ ಹೆಮ್ಮೆ ಎಲ್ಲರಿಗಿಂತಲೂ ಒಂದು ಹಿಡಿ ಹೆಚ್ಚು. ಇಂತಹ ನನ್ನೂರಿನಲ್ಲಿ ನಡೆಯುತ್ತಿರುವ ಈ ಕನ್ನಡ ಹಬ್ಬದಲ್ಲಿ ಈ ಗೌರವ ಪಡೆಯುತ್ತಿರುವುದರಿಂದ ಆಗುತ್ತಿರುವ ಸಂತೋಷವನ್ನು ಪದಗಳಲ್ಲಿ ಹೇಳಲಾರೆ. ಪ್ರಿಯ ಬಂಧುಗಳೇ, ಇದೊಂದು ಸಾಹಿತ್ಯ ಸಮ್ಮೇಳನ ಎಂಬುದಕ್ಕಿಂತ ಕನ್ನಡಿಗರ ಸ್ವಾಭಿಮಾನದ ಸಮಾವೇಶವಾಗಿ ಇತಿಹಾಸದಲ್ಲಿ ದಾಖಲಾಗಲಿದೆ. ಇದು ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನವಾಗಿದ್ದರೂ, ಬುದ್ದಿಗೇಡಿಗಳಿಂದಾಗಿ ಅಖಿಲ ಕರ್ನಾಟಕ ಮಟ್ಟದಲ್ಲಿ ಸುದ್ದಿ ಮಾಡಿ ಪ್ರಚಾರ ಪಡೆದಿದೆ. ಎಷ್ಟೇ ಅಡೆ-ತಡೆಗಳು ಎದುರಾದರೂ ಇದರ ಯಶಸ್ಸಿಗಾಗಿ ಹಲವಾರು ಕನ್ನಡ ಕಾರ್ಯಕರ್ತರು ಹಗಲಿರುಳು ಶ್ರಮಿಸಿ ದ್ದಾರೆ. ಅನೇಕರು ತಮ್ಮ ಕೈಯಲ್ಲಾದಷ್ಟು ಆರ್ಥಿಕ ನೆರವು ನೀಡಿದ್ದಾರೆ. ಆ ಮೂಲಕ ಕನ್ನಡಿಗರ ಸ್ವಾಭಿಮಾನಕ್ಕೆ ಎಸೆದ ಸವಾಲನ್ನು ದಿಟ್ಟವಾಗಿ ಎದುರಿಸಿದ್ದಾರೆ. ಇದು ನನ್ನಲ್ಲಿ ಹೋರಾಟದ ಕಾವನ್ನು ಇನ್ನಷ್ಟು ಹೆಚ್ಚಿಸಿದೆ ಎಂದಷ್ಟೇ ನಾನು ಈ ಸಂದರ್ಭದಲ್ಲಿ ಹೇಳಬ ಲ್ಲೆ. ನನ್ನನ್ನು ಈ ಸಮ್ಮೇಳನದ ಅಧ್ಯ ಕ್ಷ ರಾಗಿ ಆಯ್ಕೆ ಮಾಡಲಾಗಿದೆ ಎಂದು ಜಿ ಕಸಾಪ ಅಧ್ಯ ಕ್ಷ ರು ಮಾಹಿತಿ ನೀಡಿದ ಕೂಡಲೇ ನನ್ನ ನೆನಪಿಗೆ ಬಂದವರು, ಪರಂಪರೆಯ ಕಥೆಗಳನ್ನು ಮತ್ತು ಜೀವನಾನುಭವದ ಸಂಗತಿಗಳನ್ನು ಧಾರೆ ಎರೆದು ಪೋಷಿಸಿದ ನನ್ನ ಅಪ್ಪ-ಅಮ್ಮ, ಆನಂತರ ನನ್ನನ್ನು ಬೆಳೆಸಿದ ಪ್ರಗತಿಪರ ಚಳವಳಿ ಗಳು, ಸಾರ್ವಜನಿಕ ಬದುಕಿನ ಬವಣೆಗಳ ಮುಖಾಮುಖಿಗೆ ಬೆನ್ನೆಲುಬಾಗಿ ನಿಂತ ಕುಟುಂಬವರ್ಗ ಮತ್ತು ನನ್ನ ಸಂಗಾತಿಗಳು, ಸ್ನೇಹಿತರು. ಈ ಎಲ್ಲರಿಗೂ ನನ್ನ ನಮನಗಳು ಸಲ್ಲುತ್ತವೆ. ಈ ಆತಂಕದ ಸಂದರ್ಭದಲ್ಲಿಯೂ ದೂರ ದೂರದ ಊರಿನಿಂದ ಬಂದಿರುವ ಮತ್ತು ಇಲ್ಲಿಯ ಕನ್ನಡಾಭಿಮಾನಿಗಳಿಗೆ ನಾನು ಋಣಿ. ಏನನ್ನಾದರೂ ಬರೆದು ಓದಬೇಕೆಂದರೆ ನನಗೆ ಎಲ್ಲಿಲ್ಲದ ಹಿಂಜರಿಕೆ. ನಾನೆಂದೂ ಜನರೆದುರು ನಿಂತನಿಲುವಿನಲ್ಲಿ ಆಲೋಚಿಸುತ್ತಲೇ ಹೊಳೆದಂತೆ ಮಾತಾಡುವವನು. ಇಲ್ಲಿಯೂ ಹಾಗೆ ಮಾಡಬೇಕೆಂಬ ಆಸೆ ನನ್ನದಾಗಿತ್ತು. ಆದರೆ ಸತ್‌ಸಂಪ್ರದಾಯವನ್ನು ಮೀರಬಾರದೆಂಬ ಕಾರಣಕ್ಕೆ ಭಾಷಣವನ್ನು ಓದುತ್ತಿ ದ್ದೇನೆ. ಭಾಷಣ ಮಾಡುವುದಕ್ಕಿಂತ ಭಾಷಣ ಬರೆಯುವುದು ಹೆಚ್ಚು ತ್ರಾಸದ ಕೆಲಸವೆಂಬುದು ನನಗೆ ಕಳೆದ ಒಂದು ತಿಂಗಳಿನಲ್ಲಿ ಅರಿವಾಗಿದೆ. ನಾನು ಈ ಭಾಷಣವನ್ನು ನನ್ನೊಳಗೇ ಅಂದುಕೊಳ್ಳುತ್ತ, ತಿದ್ದಿಕೊಳ್ಳುತ್ತ, ಆಡಬೇಕೆಂದು ಅನ್ನಿಸುವ ಈ ನನ್ನ ಮಾತುಗಳು ಅವಶ್ಯಕವೇ? ಈಗಿನ ವಿದ್ಯಮಾನದಲ್ಲಿ ಎಷ್ಟು ಪ್ರಸ್ತುತವಾದೀತು ಎಂದು ಆಲೋಚಿಸುತ್ತ, ವಿಶ್ಲೇಷಿಸುತ್ತ ಕಾಲಕಳೆದಿ ದ್ದೇನೆ. ಅಧ್ಯ ಕ್ಷ ನಾಗಿ ಆಯ್ಕೆಯಾದದ್ದನ್ನು ತಿಳಿದ ದಿನದಿಂದಲೂ ಈಗ ಇಲ್ಲಿ ನಿಮ್ಮೆದುರು ಮಾತಾಡಲು ನಿಂತಿರುವ ಕ್ಷ ಣವನ್ನು ಆತಂಕದಿಂದ ಊಹಿಸಿಕೊಳ್ಳುತ್ತ ಕಳೆದಿ ದ್ದೇನೆ. ಈ ಹೊತ್ತಲ್ಲಿ ನಿಮ್ಮ ಮುಂದೆ ಆಡಲೇ ಬೇಕಾಗಿರುವ ಹಲವು ಮಾತುಗಳು ನನ್ನ ಮುಂದಿವೆ. ಅವುಗಳಲ್ಲಿ ಕೆಲವು ವಿಷಯಗಳನ್ನು ಮಾತ್ರ ನಾನಿಲ್ಲಿ ಪ್ರಸ್ತಾಪಿಸುತ್ತೇನೆ. ಆತ್ಮೀಯ ಕನ್ನಡ ಪ್ರೇಮಿಗಳೇ, ಸಾಹಿತ್ಯ ಸಮ್ಮೇಳನಗಳು ಕನ್ನಡ ನುಡಿ ಜಾತ್ರೆಗಳಾಗಿವೆಯೇ ಹೊರತು, ಕನ್ನಡಿಗರ ಧ್ವನಿಯಾದ ಉದಾಹರಣೆಗಳು ಬಹಳ ಕಡಿಮೆ. ಇನ್ನು ಸಮ್ಮೆಳನಾಧ್ಯ ಕ್ಷರ ಭಾಷಣದಲ್ಲಿನ ವಿಷಯಗಳನ್ನು ಮುಂದಿಟ್ಟುಕೊಂಡು ಗಂಭೀರ ಚರ್ಚೆ ನಡೆಸಿದ್ದಿಲ್ಲ. ಅಧ್ಯಕ್ಷೀಯ ಭಾಷಣದಲ್ಲಿನ ಬೇಡಿಕೆ, ಅಹವಾಲುಗಳಾಗಲೀ, ಅಥವಾ ಸಾವಿರಾರು ಕನ್ನಡಿಗರ ಸಮ್ಮುಖದಲ್ಲಿ ತೀರ್ಮಾನಿಸಿದ ನಿರ್ಣಯಗಳಾಗಲೀ, ಜಾರಿಗೆ ಬಂದಿದ್ದು, ನಾಡು-ನುಡಿಯ ಸಮಸ್ಯೆಗಳು ಬಗೆಹರಿದಿದ್ದು ಅಪರೂಪ. ನನ್ನ ಹೋರಾಟದ ಅನುಭವದಲ್ಲಿ ಹೇಳುವುದಾದರೆ ನಾನು ತುಮಕೂರಿನಲ್ಲಿ ಮತ್ತು ಶಿವಮೊಗ್ಗದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ, ರಾಜ್ಯ ಮತ್ತು ಮಲೆನಾಡಿನ ವಿಷಯಗಳನ್ನು ಪ್ರಸ್ತಾಪಿಸಿ ದ್ದೇನೆ. ಇವುಗಳನ್ನು ಸಮ್ಮೇಳನದ ನಿರ್ಣಯಗಳಲ್ಲಿ ಸೇರಿಸಬೇಕೆಂದು ಒತ್ತಾಯ ಮಾಡಿ, ಪ್ರತಿಭಟನೆ ಕೂಡ ಮಾಡಿ, ಅದರಲ್ಲಿ ಯಶಸ್ವಿಯೂ ಆಗಿ ದ್ದೇನೆ. ಆದರೆ ಮುಖ್ಯಮಂತ್ರಿಗಳೇ ಭರವಸೆ ನೀಡಿದ್ದರೂ ಈ ನಿರ್ಣಯಗಳು ಕಾರ್ಯರೂಪಕ್ಕೆ ಬಂದಿಲ್ಲವೆಂಬ ಬಹುದೊಡ್ಡ ವಿಷಾದ ನನ್ನಲ್ಲಿದೆ. ಅಂದ ಮಾತ್ರಕ್ಕೆ ಈ ರೀತಿಯ ಸಮ್ಮೇಳನದಲ್ಲಿ ನ್ಯಾಯಯುತ ಬೇಡಿಕೆಗಳನ್ನು, ಸಮಾಜದ ಸಂಕಟಗಳನ್ನು ಪ್ರಸ್ತಾಪಿಸುವುದು ವ್ಯರ್ಥವೆಂಬುದು ನನ್ನ ಅಭಿಪ್ರಾಯವಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ತಮ್ಮ ಅಹವಾಲನ್ನು, ಬೇಡಿಕೆಗಳನ್ನು ಸಲ್ಲಿಸುವುದು ಸಂವಿಧಾನಾತ್ಮಕ ಹಕ್ಕು. ಜನ ಜಾಗೃತರಾದರೆ ಸರ್ಕಾರಗಳು ಇವುಗಳಿಗೆ ಬೆಲೆ ನೀಡಲೇಬೇಕಾಗುತ್ತದೆ. ಆ ದೃಷ್ಟಿಯಿಂದ ಇಂದು ನಾನಿಲ್ಲಿ ಪ್ರಸ್ತಾಪಿಸುವ ವಿಷಯಗಳು ನಾವೆಲ್ಲರೂ ಸೇರಿ ನೀಡುತ್ತಿರುವ ಆದೇಶವೆಂದೂ, ಇದು ನನ್ನ ಜವಾಬ್ದಾರಿಯೂ ಹೌದೆಂದು ತಿಳಿದು ಈ ಭಾಷಣವನ್ನು ಮುಂದುವರೆಸುತ್ತೇನೆ. ಈ ಸಾಹಿತ್ಯ ಸಮ್ಮೇಳನದಲ್ಲಿ ನಾನು ವಿನಮ್ರವಾಗಿ ಒಪ್ಪಿಕೊಳ್ಳುವುದೆಂದರೆ ನಾನು ಮೂಲತಃ ಸಾಹಿತ್ಯವನ್ನು ಶಾಸ್ತ್ರೀಯವಾಗಿ ಕಲಿತವನಲ್ಲ. ತಮಗೆಲ್ಲರಿಗೂ ಗೊತ್ತಿರುವಂತೆ ನಾನು ಪರಿಸರ ಮತ್ತು ಸಾಮಾಜಿಕ ಹೋರಾಟದ ಕಾರ್ಯಕರ್ತ. ಕಳೆದ ಭರ್ತಿ ನಾಲ್ಕು ದಶಕಗಳಿಂದ ಒಂದಿಂದು ಹೋರಾಟಗಳಲ್ಲಿ ತೊಡಗಿಸಿಕೊಂಡು ಬಂದಿದ್ದೇನೆ. ಹಾಗೆ ಹೇಳುವುದಾದರೆ ಯಾರಾದರೂ ನನ್ನ ಇತ್ತೀಚಿನ ಕೃತಿಗಳನ್ನು ಓದಿ ನನ್ನನ್ನು ಸಾಹಿತಿ ಎಂದು ಗುರುತಿಸುವುದಕ್ಕಿಂತ ಹೋರಾಟಗಾರನೆಂದರೆ ನನಗೆ ಹೆಚ್ಚು ಖುಷಿಯಾಗುತ್ತದೆ. ವಾಸ್ತವವೆಂದರೆ ರಾಜ್ಯದಾದ್ಯಂತ ನಡೆದ ಹೋರಾಟಗಳಲ್ಲಿ ಭಾಗವಹಿಸಿದ್ದರಿಂದ ನನಗೆ ಸಿಕ್ಕ ಸ್ನೇಹಿತರು, ಅಭಿಮಾನಿಗಳ ಬೆಂಬಲವೆಷ್ಟೋ ಅಷ್ಟೇ ನನ್ನ ಕೃತಿ ‘ಮಂಗನಬ್ಯಾಟೆ’ಗೂ ವಿಸ್ತತೃತವಾದ ಸ್ಪಂದನೆ ಸಿಕ್ಕಿದೆ. ಇದರ ಅರಿವೂ ನನಗಿದೆ. ಹೋರಾಟ ಸಾಹಿತ್ಯದಿಂದ ಹೊರತಲ್ಲ. ಸಾಹಿತ್ಯವೂ ಹೋರಾಟದಿಂದ ಹೊರತಲ್ಲ. ಅವು ಒಂದಕ್ಕೊಂದು ಪೂರಕವೇ. ಸೈದ್ಧಾಂತಿಕ ಪ್ರೇರಣೆಯಿಲ್ಲದ ಹೋರಾಟಗಳಾಗಲೀ; ಸಾಮಾಜಿಕ ಬದ್ಧತೆಯಿಲ್ಲದ ಸಾಹಿತ್ಯವಾಗಲೀ- ಎರಡೂ ಜೊಳ್ಳು. ಜನಸಮಾನ್ಯರ ಸಂಕಟಗಳನ್ನು ಪರಿಹರಿಸುವಲ್ಲಿ ಹೋರಾಟಗಳಿಗೆ ಎಷ್ಟು ಜವಾಬ್ದಾರಿ ಇರುತ್ತದೋ ಅಷ್ಟೇ ಜವಾಬ್ದಾರಿ ಸಾಹಿತ್ಯಕ್ಕೂ ಇರುತ್ತದೆ. ಮೌಲ್ಯಯುತ ಸಾಹಿತ್ಯ ಸಾಮಾಜಿಕ ಬದ್ಧತೆಯಿಂದ ಕೂಡಿರಬೇಕಾಗುತ್ತದೆ. ಈ ಬದ್ಧತೆಯ ವಿಷಯ ಬಂದಾಗ ನನ್ನ ಆತ್ಮೀಯರಾದ, ಖ್ಯಾತ ಚಿಂತಕ ಡಾ. ಬರಗೂರು ರಾಮಚಂದ್ರಪ್ಪ ಅವರ ಮಾತು ನೆನಪಿಗೆ ಬರುತ್ತದೆ, ಅವರು ‘ಸಾಹಿತ್ಯ ಮತ್ತು ಬದ್ಧತೆ’ ಲೇಖನದಲ್ಲಿ ಹೀಗೆ ಬರೆಯುತ್ತಾರೆ; ‘ಸಾಮಾಜಿಕ ಕಳಕಳಿಯ ಹಿನ್ನೆಲೆಯುಳ್ಳ ಬದ್ಧತೆ ಈ ಕಾಲದ ಅಗತ್ಯ. ಚರಿತ್ರೆ ಇಚ್ಛಿಸುವ ಸ್ಥಿತಿಯೆಂದರೆ ಸರಿಯಾದೀತು’. ಸಾಹಿತ್ಯ ಒಣ ಹರಟೆ, ಪುಂಡರ ಗೋಷ್ಠಿಯಲ್ಲ. ಅದು ಪ್ರತಿಪಾದಿಸುವುದೇನೆಂದರೆ ಮನುಷ್ಯನನ್ನು ಮನುಷ್ಯನನ್ನಾಗಿ ಕಾಣುವುದು, ಮನಸ್ಸನ್ನು ಅರಳಿಸುವುದು. ಅವನಲ್ಲಿ ಹುದುಗಿರುವ ದುರಾಸೆ, ಕ್ರೌರ್ಯ, ಅಸೂಯೆ, ಆಕ್ರಮಣ ಪ್ರವೃತ್ತಿಗಳನ್ನು ತೊಡೆದು ಉದಾತ್ತತೆಯಿಂದ, ಸುಂದರ ಸುಖಮಯ ನೆಮ್ಮದಿಯನ್ನು ಅಭಿವ್ಯಕ್ತಿಸುವುದು. ಹಾಗೆ ನೋಡಿದರೆ ಈ ಮನುಷ್ಯ ಸಮಾಜವನ್ನು ಆಳುತ್ತಿರುವುದು ಸಾಹಿತ್ಯದ ಮೂಲಕವೇ. ಗೀತೆ, ಬೈಬಲ, ಖುರಾನ್ ನಂತಹ ಮಹಾದ್ ಧರ್ಮಗ್ರಂಥಗಳು ಕೋಟಿ ಕೋಟಿ ಜನರನ್ನು ನಿಯಂತ್ರಿಸುತ್ತಿವೆ. ಒಂದು ಕಾಲದಲ್ಲಿ ಪ್ರಪಂಚದ ಮೂರನೇ ಎರಡರಷ್ಟು ಜನರನ್ನು ಮಾನವತಾವಾದಿ ಕಾರ್ಲ್ ಮಾರ್ಕ್ಸ್ ಸಮಾಜವಾದ ಸಿದ್ಧತಾಂತದ ಕಮ್ಯುನಿಸಂ (ಪ್ರಣಾಳಿಕೆ) ನಿಯಂತ್ರಿಸುತ್ತಿತ್ತು. ಧರ್ಮ- ಸಿದ್ಧಾಂತಗಳು ತಮ್ಮ ತಮ್ಮ ಅನುಯಾಯಿಗಳನ್ನಷ್ಟೇ ನಿಯಂತ್ರಿಸಿದರೆ ಸಾಹಿತ್ಯ ಸಮಾಜದ ಎಲ್ಲರೂ ಮಾನವಂತರಾಗಿ ಬದುಕಲು ಸಹಾಯ ಮಾಡುತ್ತದೆ. ಹುಟ್ಟಿದವರಿಗೆ ಸಾವಿದೆ; ಆದರೆ ಬರೆದ ಸಾಹಿತ್ಯಕ್ಕೆಂದೂ ಅಳಿವಿಲ್ಲ ಎಂಬ ಮಾತಿದೆ. ಈ ಮಾತಿಗೆ ಪುಷ್ಟಿದಾಯಕವಾದ ವಿಚಾರವೆಂದರೆ ಯುಗದಕವಿ, ಜಗದ ಕವಿ, ಮಲೆನಾಡಿನ ಕವಿ, ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯ. ಕನ್ನಡ ಜೀವಂತವಿರುವವರೆಗೂ ನಮ್ಮ ಈ ಹೆಮ್ಮೆಯ ಕವಿಯ ಸಾಹಿತ್ಯ ಜೀವಂತವಾಗಿರುತ್ತದೆ. ಕುವೆಂಪು ಎಂದರೆ ಮಲೆನಾಡು. ಅವರು ಈ ನಮ್ಮ ಮಲೆನಾಡಿನ ಪರಿಸರವನ್ನು ರಮ್ಯವಾಗಿ ವರ್ಣಿಸಿ ವಿಜೃಂಭಿಸಿದರು. ‘ಹಕ್ಕಿ ಬಳಗ ಸುತ್ತ ಕೂಡಿ ಬೈಗಂ ಬೆಳಗು ಹಾಡಿ ಹಾಡಿ ಮಲೆನಾಡ ಸಗ್ಗ ಮಾಡಿ’ ಎನ್ನುತ್ತಾ ಅವರು ಬರೆದ ಕವಿತೆ-ಕಾದಂಬರಿಗಳು ನನ್ನನ್ನು, ನನ್ನಂತಹ ಅನೇಕರನ್ನು ಪರಿಸರವಾದಿಯಾಗಿ ರೂಪಿಸಿದೆ ಎಂದರೆ ಸಾಹಿತ್ಯದ ಶಕ್ತಿ ಅಪೂರ್ವವಾದದ್ದು ಎಂದೆನಿಸುವುದಿಲ್ಲವೇ? ನಾನು ಯಾವುದೇ ಸಾಹಿತ್ಯದ ಕೃತಿಯನ್ನಾದರೂ ವ್ಯಸನಕ್ಕಾಗಿಮಾತ್ರ ಓದುವುದಿಲ್ಲ, ಸಂಶೋಧನಾ ದೃಷ್ಟಿಯಿಂದಲೇ ಅಭ್ಯಾಸ ಮಾಡುತ್ತೇನೆ. ಆದ್ದರಿಂದ ನಾನು ಎಂದೆಂದೂ ಸಾಹಿತ್ಯದ ವಿದ್ಯಾರ್ಥಿಯೇ. ನನ್ನ ಹಾಗೂ ನನ್ನಂತಹ ಕೋಟ್ಯಂತರ ಜನರ ಅರಿವನ್ನು ಹೆಚ್ಚಿಸಿದ್ದು, ಹೆಚ್ಚಿಸುತ್ತಿರುವುದು ನಮ್ಮ ಭಾಷೆ ಕನ್ನಡ. ಕನ್ನಡ ಭಾಷೆಯೇ ನಮ್ಮ ಆಸ್ತಿ. ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಈ ಭಾಷೆಯ ಪರಂಪರೆಯೇ ಸೌಹಾದತೆ. ಹತ್ತನೇ ಶತಮಾನದಲ್ಲಿ ಆದಿಕವಿ ಪಂಪ ‘ಮಾನವ ಜಾತಿ ತಾನೊಂದೇ ವಲಂ’ ಎಂದು ಮಾನವತೆಯನ್ನು ಸಾರಿದ. ಸರ್ವಜೀವಿಗಳ ಆತ್ಮದಲ್ಲೂ ಪರಮಾತ್ಮನಿದ್ದಾನೆಂದು ಸಾರಿದ ಶಂಕರಾಚಾರ್ಯರು, ಚಾಂಡಾಲನಲ್ಲಿ ಈಶ್ವರನನ್ನು ಕಂಡರು. ಕನ್ನಡ ನೆಲದ, ವಿಶ್ವಮಾನ್ಯ ಧಾರ್ಮಿಕ ಹೋರಾಟಗಾರ ಬಸವಣ್ಣ ಮನುಷ್ಯ ಮನುಷ್ಯರಲ್ಲಿ ಬೇಧವು ಸಲ್ಲದು ಎನ್ನುವುದನ್ನು ಸರಳವಾಗಿ ಹೇಳಿದ್ದು ಹೀಗೆ; ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ. ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ. ಕೂಡಲಸಂಗಮದೇವಾ ನಿಮ್ಮ ಮನೆಯ ಮಗನೆಂದೆನಿಸಯ್ಯಾ ಇಂತಹ ಭವ್ಯ ಪರಂಪರೆ ಕನ್ನಡಕ್ಕಿದೆ. ಕುವೆಂಪು ಅವರ ವಿಶ್ವದೃಷ್ಠಿ, ವಿಶ್ವಮಾನವ ಸಂದೇಶದ ‘ಅನಿಕೇತನ’ ಕವನ ನಮ್ಮೆಲ್ಲರ ಮಂತ್ರವಾಗಬೇಕು. ನೂರು ಮತದ ಹೊಟ್ಟ ತೂರಿ, ಎಲ್ಲ ತತ್ವವೆಲ್ಲ ಮೀರಿ, ನಿರ್ದಿಗಂತವಾಗಿ ಏರಿ, ಓ ನನ್ನ ಚೇತನ, ಆಗು ನೀ ಅನಿಕೇತನ ಈ ಕವನದ ಸಾಲುಗಳು ನಮಗೆ ಬೇಕಾದುದು ಆ ಮತ, ಈ ಮತ ಅಲ್ಲ, ಮನುಜಮತ. ಆ ಪಥ ಈ ಪಥ ಅಲ್ಲ, ವಿಶ್ವಪಥ. ಆ ಒಬ್ಬರ ಈ ಒಬ್ಬರ ಉದಯ ಮಾತ್ರವಲ್ಲ. ಸರ್ವದ ಸರ್ವಸ್ತರ ಉದಯ ಎಂದು ಸಾರುತ್ತವೆ. ಇದು ಎಂದೆಂದಿಗೂ ಸರ್ವಕಾಲಿಕ ಪ್ರೇರಣೆಯಾಗಿದೆ. “ಕುವೆಂಪು ಅವರು ವಿಶ್ವಮಾನವನಾಗಲು ನಾವು ಸಾಧಿಸಲೇಬೇಕಾದ ಮೂಲಭೂತ ಸ್ವರೂಪದ ತತ್ತ್ವ ಪ್ರಣಾಳಿಕೆಯನ್ನು ಈ ಕವನದಲ್ಲಿ ಕೊಟ್ಟಿ ದ್ದಾರೆ” ಎಂದು ನಮ್ಮ ತಾಲೂಕಿನವರೇ ಆದ ಖ್ಯಾತ ಕವಿ ಶೃಂಗೇರಿ ವಿದ್ಯಾರಣ್ಯಪುರ ಪರಮೇಶ್ವರ ಭಟ್ಟ (ಎಸ.ವಿ. ಪರಮೇಶ್ವರ ಭಟ್ಟ) ಹೇಳಿರುವುದನ್ನು ನಾನಿಲ್ಲಿ (ಕೃತಿ: ರಸಋಷಿ ಕುವೆಂಪು) ನೆನಪಿಸುತ್ತೇನೆ. ಅರವತ್ತಕ್ಕೂ ಹೆಚ್ಚು ಕೃತಿಗಳನ್ನು ಬರೆದ ನಮ್ಮ ತಾಲೂಕಿನ ಈ ಹೆಮ್ಮೆಯ ಸಾಹಿತಿಯನ್ನು ಸ್ಮರಿಸುತ್ತೇನೆ. ಕುವೆಂಪು ಅವರು ‘ಹೋಗುವೆನು ನಾ’ ಕವನದಲ್ಲಿ; ಅಲ್ಲಿ ಇಂತಿರಬೇಕು, ಇಂತಿರಬಾರದೆಂಬುವುದಿಲ್ಲವೈ; ಅಲ್ಲಿ ಹೊರೆ ಹೊಣೆಯಿಲ್ಲ; ಶಾಸ್ತ್ರದ ವಿಧಿ ನಿಷೇಧಗಳಿಲ್ಲವೈ; ಜಾತಿಗೀತಿಯ ವೇದಭೇದದ ಕಟ್ಟುಕಟ್ಟಳೆ ನಿಲ್ಲದೈ: ಅಲ್ಲಿ ಪ್ರೀತಿಯೆ ನೀತಿ; ಧರ್ಮಕೆ ಬೇರೆ

ಪ್ರಸ್ತುತ Read Post »

ಕಾವ್ಯಯಾನ

ಕಾವ್ಯಯಾನ

ಸೀರೆಯ ಸಹವಾಸ ತ್ರಿವೇಣಿ ಜಿ.ಹೆಚ್ ಸೀರೆಯ ಸಹ ವಾಸ. ಸೆರಗು ನಿರಿಗೆಗಳ ಸಮೀಕರಿಸಿ ಉಬ್ಬಿದೆದೆ ಕಂಡೂ ಕಾಣಿಸದಂತೆ ಮಣಿಸಿ ನಡುವೆ ‌”ನಡು”ವಿನ ಆಕಾರವ ಅಂದಗಾಣಿಸಿದರೂ ಜಗ್ಗುವ ಬೊಜ್ಜು. ಒಂದೊಂದು ಸೀರೆ ಉಟ್ಟಾಗಲೂ ಮತ್ತೆಷ್ಟೋ ನೆನಪುಗಳ ಕದ ಬಡಿದು ಅಳಿಸಲಾಗದವನ್ನಲ್ಲೇ ಮುಚ್ಚಿಟ್ಟು… ಕಣ್ಣ ಕನಸುಗಳನ್ನೂ ಬೆಚ್ಚಗಿಟ್ಟು… ಜರಿ ಅಂಚಿನ ಸೀರೆ, ಅಲ್ಲಲ್ಲಿ ಸಣ್ಣ ಹೂಬಳ್ಳಿಯಂಚು, ನವಿರು ಭಾವ ಒಲವ ಮೆಲುಕು. ಚಿತ್ತಾಕರ್ಷಕ ಚಿತ್ತಾರ. ಉಟ್ಟು ತೊಟ್ಟು ಸಂಭ್ರಮಿಸಿದ ಆ ಘಳಿಗೆ. ಅಷ್ಟೊಂದು ಸುಲಭವಲ್ಲ ಸೆರಗ ತುದಿಯಲ್ಲಿ ಕನಸು ಕಟ್ಟಿಕೊಂಡೇ ಸಾಗುವುದು, ಅತ್ತಿತ್ತ ಓಲಾಡುವ ನಿರಿಗೆಗಳ ಸಂಭಾಳಿಸುತ್ತಲೇ ನಡೆಯವುದು, ಅಷ್ಟಕ್ಕೇ ಮುಗಿಯುವುದಿಲ್ಲ, ಊಹೂಂ ಸೀರೆಗೊಪ್ಪುವ ರವಿಕೆ, ಕುಚ್ಚು, ಬಿಂದಿ ಫಾಲು, ಕೇಶ ವಿನ್ಯಾಸ , ಪಿನ್ನು, ಚಪ್ಪಲಿ, ಉಫ್ ಒಂದೇ ಎರಡೇ ಸಾಲು ಸಾಲು ಸಾಲದು. ಮೊದಲ ಸಲ ಸೀರೆಯುಟ್ಟು ಮುಗ್ಗರಿಸಿದ್ದು ಅಮ್ಮನ ಕಣ್ಣು ತಪ್ಪಿಸಿ ಕ್ಲಾಸ್ ಮೇಟಿಗೆ ಸೀರೆ ಕೊಟ್ಟದ್ದು ವಾರ್ಡ್ರೋಬಿನ ತುಂಬ ತುಂಬಿರುವ ಥರಾವರಿ ಕಂಡು ತುಟಿಯಲ್ಲಿ ಮಂದಹಾಸ ಮೂಡಿದ್ದು… ಈಗಲೂ ಅಷ್ಟೇ ಅಮ್ಮನ ತಬ್ಬಿದ ಕಂದನಂತೆ ನಿರಿಗೆಗಳು ಅಪ್ಪಿವೆ. ಅದೆಂತಹ ಕಚಗುಳಿ, ಒಳಗೊಳಗೇ ಪುಳಕ. ನಿನ್ನೆಗಳ ಕಳೆದದ್ದು , ನಲ್ಲನ ಜೊತೆಗೆ ಸಾಗಿದ್ದು, ಭ್ರಮೆಯಲ್ಲಿ ತೇಲಿದ್ದು *********

ಕಾವ್ಯಯಾನ Read Post »

ಪುಸ್ತಕ ಸಂಗಾತಿ

ಪುಸ್ತಕ ವಿಮರ್ಶೆ

ವಲಸೆ, ಸಂಘರ್ಷ ಮತ್ತು ಸಮನ್ವಯ ಪುಸ್ತಕ ವಿಮರ್ಶೆ ಪುಸ್ತಕದ ಹೆಸರು: ವಲಸೆ ಸಂಘರ್ಷ ಸಮನ್ವಯ ಲೇಖಕರು: ಪುರುಷೋತ್ತಮ ಬಿಳಿಮಲೆ ಪ್ರಕಟನ ವರ್ಷ: 2019 ಬೆಲೆ: 400 ರೂಪಾಯಿ  ಪ್ರಕಾಶಕರು: ಅಕೃತಿ ಆಶಯ ಪಬ್ಲಿಕೇಶನ್ ಮಂಗಳೂರು ಲೋಕೇಶ ಕುಂಚಡ್ಕ ಡಾ. ಪುರುಷೋತ್ತಮ ಬಿಳಿಮಲೆಯವರ 400 ಪುಟಗಳ ಈ ಕೃತಿಗೆ 1985ರಲ್ಲಿ ಮಂಗಳೂರು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ. ಅಲ್ಪ ಸ್ವಲ್ಪ ಬದಲಾವಣೆಯೊಂದಿಗೆ ಪ್ರಸ್ತುತ ಸಂಶೋಧನ ಕೃತಿಯು ಇದೀಗ ಪ್ರಕಟವಾಗಿದೆ. ಒಮ್ಮೆ ಬರೆದಾದ ಸಂಶೋಧನ ಪ್ರಬಂಧವನ್ನು ಪರಿಷ್ಕರಣೆ ಮಾಡುವುದು ಸುಲಭದ ಕೆಲಸವಲ್ಲ, ಇನ್ನೊಂದು ಪ್ರಬಂಧವನ್ನು ಬರೆದ ಹಾಗೆ ಆಗುತ್ತದೆ. ದೆಹಲಿಯಲ್ಲಿ ಕುಳಿತುಕೊಂಡು ಈ ಕೆಲಸ ಮಾಡಿದ ಡಾ.ಬಿಳಿಮಲೆಯವರ ಸಾಹಸ ಅಭಿನಂದನೀಯವಾಗಿದೆ. ಇವತ್ತು ಪ್ರತಿಯೊಬ್ಬ ಗೌಡರ ಮನೆಯಲ್ಲಿ ಇರಬೇಕಾದ ಪುಸ್ತಕವಿದು. ಮುನ್ನುಡಿಯಲ್ಲಿ ಪ್ರೊ. ವಿವೇಕ ರೈಅವರು ಹೇಳಿದಂತೆ ‘ನಿಚ್ಚಮ್ ಪೊಸತು’ ಎನ್ನುವ ಮಾತಿಗೆತಕ್ಕಂತೆ ಈ ಕೃತಿ ಸಿದ್ದಗೊಂಡಿದೆ. ಪುಸ್ತಕದಲ್ಲಿ ಅನೇಕ ಹಳೆಯ ವಿಚಾರಗಳೂ ಇವೆ, ಹೊಸ ಸಂಗತಿಗಳೂ ಇವೆ. ಈ ನಿಟ್ಟಿನಲ್ಲಿ ‘ಹಳೆ ಬೇರು, ಹೊಸ ಚಿಗುರು ಕೂಡಿರಲು ಮರ ಸೊಬಗು’ ಎಂಬ ಮಾತುಇಲ್ಲಿ ಸಾರ್ಥಕಗೊಂಡಿದೆ. ತಲೆಮಾರುಗಳ ಜೊತೆಗಿನ ನಮ್ಮ ಸಂಬಂಧಗಳನ್ನು ಈ ಕೃತಿಯು ಗಟ್ಟಿಯಾಗಿ ಬೆಸೆಯುತ್ತದೆ. ‘ಮುಂದೇನು?’ ಎನ್ನುವ ಪ್ರಶ್ನೆಗೂ ಪುಸ್ತಕವು ಕೆಲವು ಉತ್ತರಗಳನ್ನು ನೀಡುತ್ತದೆ.  ಒಂದು ಸಮುದಾಯದ ಚರಿತ್ರೆಯನ್ನು ಕಟ್ಟುವ ಸಮಯದಲ್ಲಿ ಅಧ್ಯಯನಕಾರ ಅದನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು ಎನ್ನುವುದಕ್ಕೆ ಇದು ಒಂದು ಮಾದರಿ. ಇಂದು ಒಂದು ದೇಶ, ಒಂದು ಭಾಷೆ, ಒಂದು ಧರ್ಮ, ಒಂದು ಬಾವುಟ ಎಂಬೆಲ್ಲಾ ಮಾತುಗಳು ಕೇಳಿ ಬರುತ್ತಿರುವಾಗ ಪ್ರಸ್ತುತ ಪುಸ್ತಕವು ಗೌಡರು ಮತ್ತು ಅವರಂಥ ಅನೇಕ ಸಣ್ಣ ಸಮುದಾಯಗಳು ಭಾರತವನ್ನು ಹೇಗೆ ಕಟ್ಟಿವೆ ಎಂಬ ಕುರಿತು ನಮ್ಮ ಗಮನವನ್ನು ಸೆಳೆಯುತ್ತದೆ. ಆ ಮೂಲಕ ಸುಳ್ಯದಲ್ಲಿ ಬಹುಸಂಖ್ಯಾತರಾದ ಗೌಡ ಸಮುದಾಯದ ಕುರಿತು ನಡೆಸಿದ ಅಧ್ಯಯನಗಳಲ್ಲಿ ಈ ಕೃತಿ ಮೇರು ಪಂಕ್ತಿಯಲ್ಲಿ ನಿಲ್ಲುವ ಅರ್ಹತೆಯನ್ನು ಪಡೆದುಕೊಂಡಿದೆ. ಲಿಖಿತ ಸಾಮಗ್ರಿಗಳಿಲ್ಲದೇ ಇರುವ ಸಮುದಾಯವೊಂದg Àಚರಿತ್ರೆಯನ್ನು ಕಟ್ಟುವ ಕ್ರಮ ಹೇಗೆ ಎಂದು ಸಂಶೋಧಕರಿಗೆ ತಿಳಿದಿಲ್ಲದಿರುವಾಗ, ಅವರಿಗೆ ಮಾರ್ಗದರ್ಶನ ಮಾಡುವ ರೀತಿಯಲ್ಲಿ ಈ ಪುಸ್ತಕವನ್ನು ಬರೆಯಲಾಗಿದೆ. ಇದು ಸುಲಭದ ಕೆಲಸವೇನೂ ಅಲ್ಲ.  ವಲಸೆ ಸಂಘರ್ಷ ಸಮನ್ವಯಗಳ ಕಥನ ಪುಸ್ತಕದ ಶೀರ್ಷಿಕೆಗೆ ತಕ್ಕಂತೆ, ‘ವಲಸೆ ,ಸಂಘರ್ಷ, ಮತ್ತು ಸಮನ್ವಯ” ಎನ್ನುವ ಪರಿಕಲ್ಪನೆಗಳು ವಿಶಾಲವಾದ ವ್ಯಾಪ್ತಿಯನ್ನು ಹೊಂದಿವೆ. ಈ ಕೃತಿ ಸುಳ್ಯ ಪರಿಸರದ ಗೌಡರ ಚರಿತ್ರೆಯನ್ನು ಕಟ್ಟಿಕೊಡುತ್ತಾ, ಅಸ್ತಿತ್ವ ಮತ್ತು ಅಸ್ಮಿತೆಗಳ ನಡುವೆ ಒಂದು ರೀತಿಯಲ್ಲಿ ಕೊಂಡಿಯಾಗಿ, ಮತ್ತೊಂದು ಕಡೆ ತನ್ನೊಳಗಿನ ಅನೇಕ ಅಂಶಗಳನ್ನು ಕೃತಿಯೊಳಗೆ ದಾಖಲಿಸುತ್ತದೆ. ಗೌಡ ಸಮುದಾಯವು ತನ್ನ ವಲಸೆಯ ಸಮಯದಲ್ಲಿ, ಪ್ರಭುತ್ವದ ಜೊತೆಗೆ ನಡೆಸಿದ ಸಂಘರ್ಷ, ಮತ್ತು ಆ ಬಳಿಕ ಸಾಧಿಸಿಕೊಂಡ ಸಮನ್ವಯತೆಯನ್ನು ಕೃತಿಯು ಸಾಧಾರವಾಗಿ ವಿವೇಚಿಸುತ್ತದೆ.  ಪ್ರತಿಯೊಬ್ಬ ವ್ಯಕ್ತಿಯೂ ಜೀವನದ ಒಂದು ಹಂತದಲ್ಲಿ ನಾನು ಯಾರು? ನನ್ನ ಅಜ್ಜ ಯಾರು? ನನ್ನ ಅಜ್ಜಿ ಎಲ್ಲಿಯವರು?. ಎಲ್ಲಿಂದ ಬಂದರು? ಹೇಗೆ ಬಂದರು?  ನನ್ನ ಜಾತಿ ಯಾವುದು? ನನ್ನ ಸಮುದಾಯದ ಚರಿತ್ರೆ ಏನು? ನನ್ನ ಮೂಲ ಯಾವುದು? ಇತ್ಯಾದಿ ಪ್ರಶ್ನೆಗಳನ್ನು ಕೇಳಿಕೊಳ್ಳುತ್ತಾನೆ. ಗೌಡರಿಗೆ ಸಂಬಂಧಿಸಿದ ಹಾಗೆ ಅಂತ ಪ್ರಶ್ನೆಗಳಿಗೆ ಈ ಕೃತಿಯು ಸಮಾಧಾನಕರವಾದ ಉತ್ತರವನ್ನು ನೀಡುತ್ತದೆ. ಬೇರಿನ ಸಂಬಂಧ ಇಂದು ಬೇರಿನ ಜೊತೆಗಿನ ಸಂಬಂಧ ಕಡಿದುಕೊಳ್ಳಲಾಗುತ್ತಿದೆ. ಈ ಕಾಲದಲ್ಲಿ, ಈ ಕೃತಿಯು ಬೇರಿನ ಸಂಬಂಧದ ಪ್ರಾಮುಖ್ಯವನ್ನು ದಾಖಲಿಸುತ್ತದೆ, ಜೊತೆಗೆ ಅದರ ವಿಶ್ಲೇಷಣೆಯನ್ನು ನಡೆಸುತ್ತದೆ. ಕೂಡುಕಟ್ಟಿನ ಅಯಾಮದೊಳಗೆ ಗೌಡಸಂಪ್ರದಾಯದ ಬೇರಿನ ಅನೇಕ ಸಂಬಂಧಗಳು ಇವೆ ಎನ್ನುವುದನ್ನು ಹೇಳುತ್ತಾ, ಸಾಂಪ್ರದಾಯಿಕ ಕ್ರಮಗಳಲ್ಲಿ ಇರುವ ಅನನ್ಯತೆಯನ್ನೂ ಇಲ್ಲಿ ದಾಖಲು ಮಾಡಲಾಗಿದೆ. ಅಸ್ಮಿತೆಯ ಹುಡುಕಾಟ ಗೌಡಸಮಾಜದೊಳಗೆ ಏನೆಲ್ಲಾ ಹುದುಗಿಕೊಂಡಿದೆ ಎನ್ನುವುದನ್ನು ಈ ಕೃತಿ ಪರಿಶೀಲಿಸುತ್ತದೆ. ಗೌಡರ ಇತಿಹಾಸ, ಕಲ್ಯಾಣಪ್ಪನ ಹೋರಾಟದ°è ಗೌಡರ ಪಾತ್ರ, ಗೌಡರ ಸಾಂಪ್ರದಾಯ ವಸತಿ ಮತ್ತು ಆಹಾರ ಕ್ರಮಗಳು, ಕುಟುಂಬ ಪದ್ಧತಿ, ಬಳಿಗಳು, ಒಳಾಡಳಿತ, ಹುಟ್ಟು, ಮದುವೆ, ಸಾವಿನ ಆಚರಣೆಗಳು, ಧಾರ್ಮಿಕ ಸಂಪ್ರದಾಯಗಳು, ಸಿದ್ಧವೇಶ, ಅರೆಭಾಷೆ, ಜನಪದ ಸಾಹಿತ್ಯ, ಬೇಟೆ ಮತ್ತು ಆಟಗಳ ಜೊತೆಗೆ ಇತರೆಡೆಯ ಗೌಡರುಗಳ ಬಗೆಗೂ ಇಲ್ಲಿ ಮಾಹಿತಿಗಳಿವೆ. ಇತರ ಸಮುದಾಯದೊಳಗೆ ಇಲ್ಲದೆ ಇರುವ ಅನೇಕ ಅಂಶಗಳು ಗೌಡರಲ್ಲಿರುವುದನ್ನು ಈ ಪುಸ್ತಕದ ಮೂಲಕ ಗುರುತಿಸಬಹುದು. ಈ ಅರ್ಥದಲ್ಲಿ ಇದು ಗೌಡ ಸಂಸ್ಕøತಿಯ ಭಂಡಾರ.     ಈ ಕೃತಿಯನ್ನು ಪ್ರತಿಯೊಬ್ಬರು ಓದಿ “ನಮ್ಮದು” ಎನ್ನುವ ಸಂಸ್ಕøತಿಯ ಮರೆತ ಕಾಯಿಗಳನ್ನು ಮತ್ತೆ ಮಾಲೆಗೆ ಪೋಣಿಸಿ ಧರಿಸಿದರೆ ಗೌಡ ಸಮುದಾಯಕ್ಕೆ ತುಂಬ ಪ್ರಯೋಜನವಿದೆ. ವಲಸೆ ಸಂಘರ್ಷ ಸಮನ್ವಯ ಕೃತಿಯು ಗೌಡ ಸಮುದಾಯದ ಹೆಮ್ಮೆಯ ಕೃತಿ ಎಂದು ಹೇಳಬಹುದು. ಈ ಕೃತಿಯಲ್ಲಿ ಸಂಶೋಧನೆಗೆ ಅನೇಕ ಹೊಳಹುಗಳನ್ನು ನೀಡಲಾಗಿದೆ ಅವುಗಳನ್ನು ಆಧರಿಸಿ ಅಧ್ಯಯನ ನಡೆಸುವವರಿಗೆ ಉತ್ತಮ ಅವಕಾಶಗಳು ಸಿಗಬಹುದು. *******

ಪುಸ್ತಕ ವಿಮರ್ಶೆ Read Post »

ಕಾವ್ಯಯಾನ

ಕಾವ್ಯಯಾನ

ಗಾಳಿಯ ಉತ್ಸವ ಪ್ರೇಮಶೇಖರ ಗಕ್ಕನೆ ಹಾರಿ ಗಬಕ್ಕನೆ ಹಿಡಿದು ನುಂಗೇಬಿಟ್ಟಿತು ನಮ್ಮೂರ ಕೆರೆಯ ಮೀನೊಂದನು ಸಾವಿರ ಸಾವಿರ ಮೈಲು ದೂರದ ಸೈಬೀರಿಯಾ ದಿಂದ ಹಾರಿ ಬಂದು ಬೆಳ್ಳಂಬೆಳಿಗ್ಗೆ ಕೆರೆ ಏರಿ ಮೇಲಿನ ಅರಳೀಮರದ ಕೊಂಬೆಯೇರಿ ಕೂತ ಸ್ವಾಲೋ ಹಕ್ಕಿಯೊಂದು. ಇಂದು ನವೆಂಬರ್ ಒಂದು. ತುರ್ತಾಗಿ ಹೋಗ ಬೇಕಿದೆ ನಾನೀಗ ರಾಜ್ಯೋತ್ಸವದಾಚರಣೆಗೆ, ನನಗಾಗಿ ಕಾದು ನಿಂತಿದೆ ಕಾರ್ಯಕರ್ತನ ಬೈಕು, ಕೂಗಿ ಕರೆಯುತ್ತಲೂ ಇದೆ ಮೈಕು. ಭದ್ರವಾಗಿದೆ ನನ್ನ ಜೇಬಿನಲಿ ಭಾಷಣದ ಹಾಳೆ, ಸಿಕ್ಕಿನಿಂತಿದೆ ನನ್ನ ಗಂಟಲಲಿ ಸ್ವಾಲೋ ನುಂಗಿದ ಮೀನು ಮೂಳೆ. ಇದೇರೀ ಯುಗಯುಗದ ಕತೆ ಅನ್ನುತ್ತಿದ್ದಾಳೆ ಅರಳೀಮರ ಸುತ್ತಿಬಂದ ಲಲಿತೆ. ಹೌದು, ನೀರಲೊಂದು ಮೀನು ಆಡುತಿದೆ, ಮೇಲೊಂದು ಸ್ವಾಲೋ ಹೊಂಚು ಹಾಕುತಿದೆ ಅರಳೀಮರ ನಿಂತು ನೋಡುತಿದೆ. ಗಾಳಿ…? ಅದು ತನ್ನ ಪಾಡಿಗೆ ತಾನು ಬೀಸುತ್ತಿದೆ, ಇಂದಿಲ್ಲಿ, ನಾಳೆ ಇನ್ನೆಲ್ಲೋ. **********

ಕಾವ್ಯಯಾನ Read Post »

You cannot copy content of this page

Scroll to Top