ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಪವರ್ ಲೂಮ್…!

ಪವರ್ ಲೂಮ್…!(ನೇಕಾರನ ಸ್ವಗತ) ಡಾ. ಅರಕಲಗೂಡು ನೀಲಕಂಠ ಮೂರ್ತಿ ಹೊತ್ತು ಕೂಡ ಮೂಡದ ಹೊತ್ತಿಗೆಈಜುಗಾರ ತುಂಬು ಹೊಳೆ ಧುಮಿಕಿದ ಹಾಗೆ,ಮೈಮುರಿವ ಆಯಾಸದಲುಒಂದು ದಿನ ತಪ್ಪದ ಹಾಗೆಗುಂಡಿಯೊಳು ಇಳಿದರಾಯ್ತು – ಕಾಲೊದರಿ…‘ತನ್ನ ಪುಟ್ಟ ಎಳೆಯ ಹಾಸುಹೊಕ್ಕಲಿನೂಲಿಗೇ ಅರಿವೆ ನೇಯುವ ಸಿರಿಲಾಳಿಗೋ ಮುಗಿಲಂತೆ ಗುಡುಗಿಹರಿದೋಡುವ ತವಕ!’ ನೇಯುವುದುನಮಗೆ ಅಂತರಂಗದಲಿ ಒಪ್ಪಿಅಪ್ಪಿದ ಕಸುಬುಹಗಲಿರಲಿ ಇರುಳಿರಲಿಅಥವ ನಡುರಾತ್ರಿಯೇ ಇರಲಿಬೆತ್ತಲೆ ಬೆಚ್ಚಗೆ ಮುಚ್ಚುವ ಬದುಕಲಿಮನೆಯ ಒಬ್ಬೊಬ್ಬರಿಗೂ ಕೈತುಂಬ ಕೆಲಸ!ಇಷ್ಟಾದರೂ ಒಂದೆರಡು ನವೆದ ಅಂಗಿತೇಪೆಯಾದ ಪಂಚೆ ನಮ್ಮೊಡಲ ಮುಚ್ಚಲುಒಳಗಿರದು ಒಂದು ಕಾಚ ಎಂದೂ! ದಢಕ್ಕನೆ-ನಮ್ಮ ತುತ್ತಿನ ಗಣಿಮಗ್ಗದ ಎರಡಡಿ ಗಣಿಒಮ್ಮೆಲೆ ಬಿದ್ದು ಮಣ್ಣಾದ ಮನೆ…ಎಲ್ಲ ತಟಸ್ಥ ನಿಶಬ್ದ!ಕುಟುಂಬದ ಎಲ್ಲ ಕೈಕಾಲು ಕಚ್ಚಿತುಳಿದು ಮೆರೆದ ವಿದ್ಯುತ್ ತಂತಿ!ಎಲ್ಲಿ ಯಾವ ದೇವರ ಮೊರೆಜಠರದ ನಿಲ್ಲದ ಕೊರೆತದ ಕರೆಗೆ..ಹರಿದುಹೋದ ಬಟ್ಟೆಬಡ ಬದುಕುಕ್ಷಣ ಕ್ಷಣ ಚೂರುಚೂರಾಗಿ… ದಾರ ತುಂಡಾಗಿ ಲಾಳಿ ನಿಂತ ಕ್ಷಣಹರಿದ ದಾರಕ್ಕೆ ಮತ್ತೆ ಗಂಟುಅಥವಾ ಅಂಟು –ಮತ್ತೆ ಲಾಳಿ ಪಯಣ!ಅಂದು ಒಂದೊಮ್ಮೆ…ಈಗ-ನಾನೇ ನಿಂತು ಹೋದ ಘಳಿಗೆಎಲ್ಲಿ ಹುಡುಕುವುದು ಈ ಲಾಳಿಮುಲಾಮು ಕಷಾಯ ನನಗಾಗಿಎತ್ತಿ ಕೂರಿಸಲು ನನ್ನ ಮತ್ತೆಮಗ್ಗದೊಳಗೆನೂಲಿನಲಿ ಹಚ್ಚಲು ಬೆಳಕಿನ ಹೊನಲು…! ********************************** .

ಪವರ್ ಲೂಮ್…! Read Post »

ಇತರೆ, ಪ್ರಬಂಧ

ಬೀದಿಯ ಪ್ರಪಂಚ….

ಲಲಿತ ಪ್ರಬಂಧ ಬೀದಿಯ ಪ್ರಪಂಚ…. ಟಿ.ಎಸ್.ಶ್ರವಣಕುಮಾರಿ ಹಾದಿ ಬೀದಿಗಳಿಗೆ ತನ್ನದೇ ಒಂದು ಆಕರ್ಷಣೆಯಿದೆ. ಅದರದ್ದೇ ಒಂದು ಪ್ರಪಂಚ. ಎಂಥ ಅಳುತ್ತಿರುವ ಪುಟ್ಟ ಮಕ್ಕಳನ್ನೂ ಎತ್ತಿಕೊಂಡು ಬೀದಿಗೆ ಕರೆದುಕೊಂಡು ಬಂದರೆ ಕೆಲವೇ ಕ್ಷಣಗಳಲ್ಲಿ ಅವುಗಳ ಅಳು ಮಾಯ. ಅವುಗಳಿಗೆ ತೋರಿಸುವುದಕ್ಕೆ ಇಡಿಯ ಪ್ರಪಂಚವೇ ಅಲ್ಲಿದೆ. “ಪುಟ್ಟೂ ಅಲ್ನೋಡು ಕಾರು.. ಬಂತು ಬಂತು ಬಂತು…. ಈಗ ಸ್ಕೂಟರ್ ನೋಡೋಣ.. ಮಾಮಾ ಬಂದ್ಮೇಲೆ ಸ್ಕೂಟರ್‌ನಲ್ಲಿ ರೌಂಡ್ ಹೋಗ್ತೀಯಾ…  ಇದೇನಿದು..? ಸ್ಕೂಲು ವ್ಯಾನು.. ಮುಂದಿನ್ವರ್ಷದಿಂದ ನೀನೂ ಸ್ಕೂಲಿಗೆ ಹೋಗ್ತೀಯಾ ಅಣ್ಣಾ ತರ…. ಇಲ್ನೋಡು ಮರ.. ಅಬ್ಭಾ! ಎಷ್ಟೊಂದು ಹೂವು ನೋಡು… ಅಲ್ನೋಡು ಕಾಕಿ `ಕಾವ್ ಕಾವ್’ ಅದರ ಬಳಗಾನೆಲ್ಲಾ ಕರೀತಿದೆ. ಹೌದಾ.. ಹಾರಿಹೋಯ್ತಾ ಅದು. ಅಲ್ಲೇ ನೋಡ್ತಾ ಇರು ಈಗ ಗಿಣಿಮರಿ ಬರತ್ತೆ ಅಲ್ಲಿ… ನೋಡ್ದ್ಯಾ ನೋಡ್ದ್ಯಾ ಎಷ್ಟು ಚೆನ್ನಾಗಿದೆ ನೋಡು.. ಈಗ ನೋಡು ಅದರ ಫ್ರೆಂಡೂ ಬಂತು.. ಏನೋ ಮಾತಾಡ್ಕೊಂಡು ಒಟ್ಗೆ ಹಾರೋದ್ವು. ಇಲ್ನೋಡಿಲ್ನೋಡು ಪಕ್ಕದ್ಮನೆ ಮೀನಾ ಅಜ್ಜಿ ಒಣಗಿ ಹಾಕಿರೋ ಬೇಳೇನ ಎಷ್ಟೊಂದು ಗುಬ್ಬಿಗಳು ತಿಂತಾ ಇವೆ.” ಅಷ್ಟರಲ್ಲಿ ಎದುರಂಗಡಿಯ ಬದರಿ ಮಾಮ ಪುಟ್ಟೂನ ಕರೀತಾನೆ “ಬರ್ತೀಯಾ ನಮ್ಮಂಗಡೀಗೆ ಬಿಸ್ಕತ್ತು, ಚಾಕಲೇಟು ಎಲ್ಲಾ ಕೊಡ್ತೀನಿ.” “ಆಮೇಲ್ಬರ್ತೀನಿ” ಅನ್ನೂ ಮಾಮಂಗೆ… ಅಲ್ನೋಡು ತರಕಾರಿ ಗಾಡಿ ಬರ್ತಾ ಇದೆ. ಅಜ್ಜೀನ ಕೇಳ್ಕೊಂಡು ಬರೋಣ್ವಾ ಏನು ತರಕಾರಿ ಬೇಕೂಂತ” ….. ಹೀಗೆ ಮಾತಾಡಿಸ್ತಾ ಇದ್ರೆ ಟೈಂಪಾಸಾಗದೆ ಅಳ್ತಾ ಇದ್ದ ಮಗು ಬೇರೆ ಪ್ರಪಂಚಕ್ಕೇ ಹೋಗ್ಬುಡತ್ತಲ್ವಾ… ಮಗೂನೆ ಯಾಕೆ?!.. ನಮಗೂ ಮನೆಯ ಏಕತಾನತೆ ಬೇಸರ ಬಂದರೆ ಒಂದು ಸ್ವಲ್ಪ ಹೊತ್ತು ಮನೆಯ ಮುಂದೋ ಅಥವಾ ಬಾಲ್ಕನಿಯ ಕಿಟಕಿಯೆದುರೋ ಕೂತು ಹಾಗೇ ಬೀದಿಯ ಕಡೆ ನೋಡುತ್ತಿದ್ದರೆ ಎಷ್ಟು ವೈವಿಧ್ಯಮಯ ಪ್ರಪಂಚದಲ್ಲಿ ನಾವೂ ಕಳೆದುಹೋಗುತ್ತೇವೆ…. ಏಳುವಾಗಲೇ `ಸೊಪ್ಪೋ ಸೊಪ್ಪು’ ಎಂದು ಕೂಗಿಕೊಂಡು ಬರುವ ಮುದುಕನ ಕರೆಯಿಂದಲೇ ನನಗೆ ದಿನವೂ ಬೆಳಗಾಗುವುದು. ಬೆಳಗಿನ ಐದು ಗಂಟೆಗೆ ಮುಲ್ಲಾ `ಏಳಿ ಬೆಳಗಾಯಿತು’ ಎಂದು ಕರೆದಾಗ ಎಚ್ಚರಾದರೂ `ಸ್ವಲ್ಪ ಹೊತ್ತು ಬಿಟ್ಟು ಏಳೋಣ’ ಎಂದು ಮುದುರಿಕೊಂಡವಳನ್ನು ಆರೂವರೆಯಾಯಿತು ಇನ್ನಾದರೂ ಏಳು ಎಂದು ಎಬ್ಬಿಸುವುದು ಸೊಪ್ಪಿನವನ ಕರೆಯೇ. ಎದ್ದ ಐದು ಹತ್ತು ನಿಮಿಷಗಳಲ್ಲಿಯೇ `ಹಾಲು’ ಎಂದು ಕೂಗುತ್ತಾ ಹಾಲಿನ ಪ್ಯಾಕೆಟ್ಟನ್ನು ತಂದಿಡುವ ಬದರಿ. `ಹೂವು’ ಎಂದು ಹೂವಿನ ಸರವನ್ನು ಬಾಗಿಲಿಗೆ ಸಿಕ್ಕಿಸಿ ಹೋಗುವ ಹೂವಮ್ಮ. ಕಾಫಿಯ ಲೋಟ ಹಿಡಿದು ಬರುವ ವೇಳೆಗೆ ದಿನ ಪತ್ರಿಕೆ ಎಸೆದು ಹೋಗುವ ಹುಡುಗ…. ಎಲ್ಲರೂ ಹೊರಗಿನ ಜಗತ್ತಿನ ಸಂಪರ್ಕವಾಹಕರು. ಹೂವಿನ ಗಾಡಿಯ ಹಿಂದೆಯೇ ತೆಂಗಿನ ಕಾಯಿ ಮಾರುವವನು ಬರುತ್ತಾನೆ. ಎಂಟು ಗಂಟೆಗೆ ತರಕಾರಿ ಗಾಡಿಯವರ ಸಾಲು ಶುರುವಾಗುತ್ತದೆ. ಕೆಲವು ಗಾಡಿಗಳು ಒಂದೊಂದೇ ತರಕಾರಿಯದು, ಟೊಮೇಟೋ, ಈರುಳ್ಳಿ, ಅವರೆ ಕಾಯಿ’ ಇಂತವು. ಇನ್ನು ಕೆಲವು ಡಿಪಾರ್ಟ್-ಮೆಂಟಲ್ ಸ್ಟೋರಿನ ಹಾಗೆ ಶುಂಟಿ, ಮೆಣಸಿನಕಾಯಿ, ಕೊತ್ತಂಬರಿ ಸೊಪ್ಪಿನಿಂದ ಶುರುವಾಗಿ ಎಲ್ಲ ಬಗೆಯ ತರಕಾರಿಗಳನ್ನೂ ಕಣ್ಣಿಗಂದವಾಗುವ ಹಾಗೆ ಜೋಡಿಸಿಕೊಂಡು ಬಂದ ತರಕಾರಿ ಗಾಡಿಗಳು. ಮನೆಯೊಳಗೇ ಇದ್ದರೂ, ಅವರ ಧ್ವನಿಯ ಮೇಲೆ ಇಂತದೇ ಗಾಡಿ ಬಂದಿದೆಯೆಂದು ಅಂದಾಜಾಗುವಷ್ಟರ ಮಟ್ಟಿಗೆ ಅವರ ಧ್ವನಿ ಮೆದುಳಿನೊಳಗೆ ಮುದ್ರಿತವಾಗಿರುತ್ತದೆ. ಹೀಗೇ ದಿನಾ ಬೆಳಗ್ಗೆ ಏಳೂವರೆಗೆ `ರೋಜಾ ಹೂವು ಶ್ಯಾವಂತ್ಗೆ ಹೂವೂ..’ ಅಂತ ಗೊಗ್ಗರು ದನಿಯಲ್ಲಿ ಕೂಗಿಕೊಂಡು ಬರುತ್ತಿದ್ದ ಮುದುಕನ ಧ್ವನಿ ಮೂರ್ನಾಲ್ಕು ದಿನ ಕೇಳದೇ ಏನೋ ಕೊರೆಯಾದಂತೆನಿಸುತ್ತಿತ್ತು. ನಂತರ ಅವನು ಮುಂದಿನ ಬೀದಿಯಲ್ಲಿ ಗಾಡಿ ತಳ್ಳಿಕೊಂಡು ಹೋಗುವಾಗ ಸೇವಾಕ್ಷೇತ್ರ ಆಸ್ಪತ್ರೆಯ ಬಳಿ ಹೃದಯಾಘಾತವಾಗಿ ದಾರಿಯಲ್ಲೇ ಸತ್ತಿದ್ದ ಸುದ್ದಿ ಕೇಳಿದಾಗ ಬಂದುಗಳೊಬ್ಬರನ್ನು ಕಳೆದುಕೊಂಡ ಭಾವ ಬಹಳದಿನಗಳು ಆ ಹೊತ್ತಿಗೆ ಕಾಡುತ್ತಿತ್ತು. ಹನ್ನೊಂದು ಗಂಟೆಯ ವೇಳೆಗೆ ಬರುವ ಎಳನೀರು ಮಾರುವವನು, ಹಣ್ಣಿನ ಬುಟ್ಟಿ ಹೊತ್ತು ಬರುವವನು “ಪಕ್ಕದವ್ರಿಗೆ ಹೇಳ್ಬೇಡಿ. ನಿಮಗಂದ್ರೆ ಎರಡು ರೂಪಾಯಿ ಕಮ್ಮಿಗೇ ಕೊಡ್ತಿದೀನಿ” ಎಂದು ಎಲ್ಲರ ಮನೆಯಲ್ಲೂ ಹಾಗೆ ಹೇಳಿಯೇ ವ್ಯಾಪಾರ ಮಾಡಿದ್ದರೂ, ಅವನು ಹೇಳಿದ್ದು ನಮಗಷ್ಟೇ ನಿಜವೆಂದು ಆ ಕ್ಷಣಕ್ಕಾದರೂ ನಂಬುವಂತಾಗುತ್ತದೆ. ಮಧ್ಯಾನ್ಹದ ವೇಳೆ ಬರುವ ಪೈನಾಪಲ್, ಸೌತೆಕಾಯಿ, ಇಂತವನ್ನು ಹೆಚ್ಚಿಕೊಡುವ ಗಾಡಿಗಳು, ಅಲಂಕಾರಿಕ ಸಸ್ಯಗಳು ಮತ್ತು ಹೂಕುಂಡಗಳನ್ನಿಟ್ಟುಕೊಂಡು ಬರುವ ಕೈಗಾಡಿಗಳು, ಸಾಯಂಕಾಲ ನಾಲ್ಕು ಗಂಟೆಯಿಂದ ಶುರುವಾಗುವ ಮಲ್ಲಿಗೆ ಮೊಗ್ಗು, ಕಳ್ಳೇ ಪುರಿ, ಚುರುಮುರಿ-ಪಾನೀಪೂರಿ ಗಾಡಿ, ಠಣಾ ಠಣಾ ಎಂದು ಸದ್ದು ಮಾಡುತ್ತಾ ಕಡಲೇಕಾಯನ್ನು ಹುರಿಯುವವನ ಗಾಡಿ ಎಲ್ಲರೂ ರಂಗಸ್ಥಳದ ಮೇಲಿನ ತಮ್ಮ ಪಾತ್ರವನ್ನು ಚೊಕ್ಕವಾಗಿ ನಿರ್ವಹಿಸುವವರಂತೆ ಆಯಾಕಾಲಕ್ಕೆ ಬಂದು ಹೋಗುತ್ತಿರುತ್ತಾರೆ. ಇವರೆಲ್ಲಾ ನಿಯತಕಾಲಿಕರಂತಿದ್ದರೆ ಸೋಫಾ ರಿಪೇರಿ, ಛತ್ರಿ, ಪಾದರಕ್ಷೆ ರಿಪೇರಿಯವರು, ಚಾಕು, ಈಳಿಗೆಗಳನ್ನು ಚೂಪು ಮಾಡುವವರು, ಚಾಪೆ, ನೆಲವಾಸು, ಮತ್ತು ಕಾರ್ಪೆಟ್ಟುಗಳನ್ನು ಮಾರುವವರು, ಪ್ಲಾಸ್ಟಿಕ್, ಅಲ್ಯುಮಿನಿಯಂ, ಮತ್ತು ಸ್ಟೀಲ್ ಪಾತ್ರೆ ಮಾರಾಟಗಾರರು, ಕಡೆಗೆ ರಂಗೋಲಿ, ಪೊರಕೆ, ಮಕ್ಕಳ ಬಟ್ಟೆಗಳು, ಆಟಿಕೆಗಳು, ಪೆಟ್ಟಿಕೋಟು ಇತ್ಯಾದಿಗಳನ್ನು ಮಾರುವವರು ಅತಿಥಿ ನಟರಂತೆ ಆಗೀಗ ಬಂದು ತಮ್ಮ ದರ್ಶನ ಭಾಗ್ಯವನ್ನು ಇತ್ತು ಹೋಗುತ್ತಿರುತ್ತಾರೆ. ಇದಷ್ಟೇ ಬೀದಿ ಪ್ರಪಂಚವೇ? ಖಂಡಿತಾ ಅಲ್ಲ. ಈಗ ಅಂಚೆಯಣ್ಣ ಇಲ್ಲ ಬಿಡಿ; ಅವನಾದರೆ ಒಂದು ನಿಗದಿತ ಸಮಯದಲ್ಲಾದರೂ ಬರುತ್ತಿದ್ದ. ಈಗ ಅವನ ಬದಲಿಗೆ ಕೊರಿಯರ್ ಹುಡುಗರು ಹೊತ್ತು ಗೊತ್ತಿಲ್ಲದೆ ಬಾಗಿಲು ತಟ್ಟುತ್ತಾರೆ. ಮೊದಲಿಗೆ ದಿನವೂ ಬರುತ್ತಿದ್ದ ಅಂಚೆಯಣ್ಣ ಮನೆಯವರೆಲ್ಲರಿಗೆ ಪರಿಚಿತನಾಗಿರುತ್ತಿದ್ದ. ಎಷ್ಟೋ ಹಳ್ಳಿಗಳಲ್ಲಿ, ಸಣ್ಣ ಪುಟ್ಟ ಊರುಗಳಲ್ಲಿ ಸಂದೇಶವಾಹಕನಾಗಿಯೂ ಇರುತ್ತಿದ್ದ. ಓದು ಬಾರದವರಿಗೆ ಪತ್ರದಲ್ಲಿದ್ದುದನ್ನು ಓದಿ ಹೇಳುತ್ತಿದ್ದ. ಬಿಸಿಲು ಹೊತ್ತಿನಲ್ಲಿ ಬಂದವನಿಗೆ ಒಂದು ಲೋಟ ಪಾನಕವೋ, ಮಜ್ಜಿಗೆಯೋ ಕೊಡುವ ಪರಿಪಾಠವೂ ಕೆಲವು ಮನೆಗಳಲ್ಲಿರುತ್ತಿತ್ತು. ಬಂಧುವಲ್ಲದಿದ್ದರೂ ಆತ ಮಿತ್ರರ ಗುಂಪಿನಲ್ಲಿ ಸೇರಿ ಹೋಗುತ್ತಿದ್ದ. ಈಗಲಾದರೋ ದಿನಕ್ಕೊಬ್ಬ ಕೊರಿಯರ್ ಹುಡುಗರು. ಯಾರು ನಿಜವಾದವರೋ, ಯಾರು ಮೋಸಗಾರರೋ ಒಂದೂ ಅರಿವಾಗದೆ ಅವರನ್ನು ಬಾಗಿಲ ಹೊರಗೇ ನಿಲ್ಲಿಸಿ ಗ್ರಿಲ್ ಬಾಗಿಲಿನ ಕಿಂಡಿಯಿಂದಲೇ ಮಾತಾಡಿಸಿ ಲಕೋಟೆಯಾದರೆ ಅಲ್ಲಿಂದಲೇ ತೆಗೆದುಕೊಂಡು, ಪಾರ್ಸೆಲ್ ಆದರೆ, ಅದರ ಹಿಂದು ಮುಂದನ್ನೆಲ್ಲಾ ವಿಚಾರಿಸಿಕೊಂಡು ನಂತರ ಬಾಗಿಲನ್ನು ಸ್ವಲ್ಪವೇ ತೆರೆದು ಡಬ್ಬಿಯನ್ನು ತೆಗೆದುಕೊಂಡ ತಕ್ಷಣ ಮತ್ತೆ ಬಾಗಿಲು ಮುಚ್ಚುವುದು ಸಹಜವೇ ಆಗಿದೆ. ಇನ್ನು ಮನೆ ಬಾಗಿಲು ತಟ್ಟುವ ಮಾರಾಟಗಾರರದಂತೂ ಇನ್ನೊಂದು ಉಪಟಳ. ಪುಸ್ತಕ, ದಿನೋಪಯೋಗಿ ವಸ್ತುಗಳಿಂದ ಹಿಡಿದು ಮಕ್ಕಳ ಡೈಪರ್ ವರೆಗೆ ಎಲ್ಲವನ್ನೂ ಮನೆಬಾಗಿಲಿಗೆ ತರುತ್ತಾರೆ. ನಕಲಿಯೆಷ್ಟೋ, ಅಸಲಿಯೆಷ್ಟೋ ದೇವನೇ ಬಲ್ಲ! ಬೀದಿಯ ಮೇಲೆ ಬರುವ ಮೆರವಣಿಗೆ, ದೇವರ ಉತ್ಸವಗಳೆಂದರೆ ಮಕ್ಕಳಾದಿಯಾಗಿ ದೊಡ್ಡವರವರೆಗೂ ಎಲ್ಲರಿಗೂ ಆಕರ್ಷಣೆ. ಅಂತಹ ಸದ್ದು ಕಿವಿಗೆ ಬಿದ್ದಿತೆಂದರೆ ಸಾಕು… ಮನೆಯಲ್ಲಿರುವವರೆಲ್ಲರೂ ಬೀದಿಯ ಕಡೆಗೇ… ನಾನು ಎಳೆಯದರಲ್ಲಿ ನೋಡುತ್ತಿದ್ದ ಮಾರ್ಗಶಿರ ಮಾಸದ ಬೆಳಗಿನ ಝಾವದಲ್ಲಿ ತಾಳ ತಟ್ಟಿಕೊಂಡು ತನ್ನದೇ ಒಂದು ಅಲೌಕಿಕ ಛಾಪನ್ನು ನಿರ್ಮಿಸಿಕೊಂಡು ಬರುತ್ತಿದ್ದ ದತ್ತ ಜಯಂತಿಯ ಭಜನೆ, ರಥಸಪ್ತಮಿಯಲ್ಲಿ ಸುಶ್ರಾವ್ಯ ವಾಲಗದೊಂದಿಗೆ ಬರುತ್ತಿದ್ದ ತೇರು, ಆಡಿ ಕೃತ್ತಿಕೆಯ ದಿನದಂದು ಗುಡ್ಡೇಕಲ್ಲಿನ ಸುಬ್ರಹ್ಮಣ್ಯೇಶ್ವರನ ದೇವಸ್ಥಾನಕ್ಕೆ `ಹರೋಹರ’ ಎಂದು ಕೂಗುತ್ತಾ ಬೇವಿನ ಮತ್ತು ಅರಿಶಿನ ಬಣ್ಣದ ಉಡುಗೆಯುಟ್ಟು ಕಾವಡಿ ಎತ್ತಿಕೊಂಡು ಹೋಗುತ್ತಿದ್ದ, ಕೆಲವರು ಭೀಕರವಾಗಿ ಕೆನ್ನೆಯನ್ನೂ, ನಾಲಗೆಯನ್ನೂ ಕಂಬಿಯಿಂದ ಚುಚ್ಚಿಕೊಂಡು, ಮತ್ತೆ ಕೆಲವರು ಬೆನ್ನಿಗೆ ಕೊಕ್ಕೆಯನ್ನು ಸಿಕ್ಕಿಸಿಕೊಂಡು ಎಳೆದುಕೊಂಡು ಹೋಗುತ್ತಾ ನಮ್ಮ ಮನದಲ್ಲಿ ಭಕ್ತಿಯೊಂದಿಗೆ ಭಯವನ್ನೂ ಹುಟ್ಟಿಸುತ್ತಿದ್ದ ಭಕ್ತರ ಗುಂಪು… ವಿಜಯ ದಶಮಿಯ ದಿನ ಊರಿನ ಎಲ್ಲ ದೇವರೂ ಬನ್ನಿ ಕಡಿಯುತ್ತಿದ್ದ ನೆಹರೂ ಮೈದಾನಕ್ಕೆ ಮೆರವಣಿಗೆ ಹೋಗುತ್ತಿದ್ದ ದೃಶ್ಯ…  ಎಲ್ಲವೂ ನನ್ನ ನೆನಪಿನ ಕೋಶದಲ್ಲಿ ಭದ್ರವಾಗಿ ಬೇರುಬಿಟ್ಟು ಕುಳಿತುಬಿಟ್ಟಿವೆ. ಹೀಗೇ ಒಂದು ಆಡಿ ಕೃತ್ತಿಕೆಯ ದಿನ ನಾವೆಲ್ಲರೂ ಕಾವಡಿಯ ಮೆರವಣಿಗೆಯನ್ನು ನೋಡಲು ಬೀದಿಗೆ ಬಂದು ನಿಂತಿದ್ದೆವು. ನಮ್ಮ ಮನೆಯ ಕೆಲಸದಾಕೆ ಮುನಿಯಮ್ಮನೂ ನಮ್ಮ ಜೊತೆಗೇ ನಿಂತಿದ್ದವಳಿಗೆ ಅದೇನಾಯಿತೋ ಇದ್ದಕ್ಕಿದ್ದಂತೆ ಅರೆಗಣ್ಣಿನಲ್ಲಿ ಎರಡೂ ಕೈಗಳನ್ನು ತಲೆಯಮೇಲೆ ಜೋಡಿಸಿ ಮುಗಿದುಕೊಂಡು ಮೆರವಣಿಗೆಯ ಹಿಂದೆಯೇ ಓಡಿಹೋದಳು. ನಾವೆಲ್ಲರೂ `ಮುನಿಯಮ್ಮಾ ಮುನಿಯಮ್ಮಾ’ ಎಂದು ಜೋರಾಗಿ ಕರೆಯುತ್ತಲೇ ಇದ್ದೇವೆ; ಅವಳಿಗೆ ಕೇಳಿಸಿದ್ದರೆ ತಾನೆ! ಸ್ವಲ್ಪ ಹೊತ್ತು ಕಾದು ನಿಂತಿದ್ದು ನಾವೆಲ್ಲಾ ಮನೆಯೊಳಗೆ ಬಂದವು. ಅದೆಷ್ಟು ದೂರ ಹೋಗಿದ್ದಳೋ… ಒಂದು ಗಂಟೆಯ ನಂತರ ಅವಳೂ ವಾಪಸ್ಸು ಬಂದಳು. ಬಹಳ ಆಯಾಸಗೊಂಡಿದ್ದಳು. ಅಮ್ಮನಿಗೆ ಅವಳು ಸಾಕ್ಷಾತ್ ಸುಬ್ರಹ್ಮಣ್ಯೇಶ್ವರನೇ ಅನ್ನಿಸಿಬಿಟ್ಟಿತೋ ಏನೋ..  ಅವಳನ್ನು ಕೂರಿಸಿ ಒಂದು ಲೋಟ ತಣ್ಣಗೆ ಪಾನಕ ಮಾಡಿಕೊಟ್ಟು “ಸುಸ್ತಾಗಿದ್ದರೆ ಮನೆಗೆ ಹೋಗಿ ಮಲಗಿಕೋ. ನಾಳೆ ಬಂದು ಬಟ್ಟೆ ಒಗೆಯುವೆಯಂತೆ” ಎಂದರು. ಸ್ವಲ್ಪ ಹೊತ್ತು ಕೂತಿದ್ದವಳು ಮುನಿಯಮ್ಮನಾಗೇ `ಈಗ ಸರಿಹೋಯ್ತು’ ಎನ್ನುತ್ತಾ ತನ್ನ ಕೆಲಸಕ್ಕೆ ಎದ್ದಳು. ನಮಗೆಲ್ಲಾ ಭಕ್ತಿಯ ಈ ಮುಖದ ದರ್ಶನವಾಗಿತ್ತು! ಈಗ ಬೆಂಗಳೂರಿನಲ್ಲಿ ನಾವಿರುವ ರಸ್ತೆಯ ಒಂದು ಅಡ್ಡರಸ್ತೆಯಲ್ಲಿ ಗಂಗಮ್ಮನ ಗುಡಿಯಿದೆ. ಅದರ ಮುಂದಿನ ರಸ್ತೆಯಲ್ಲಿ ಮಸೀದಿಯಿದೆ. ಅಣ್ಣಮ್ಮ ದೇವಿಯ ಭಕ್ತಮಂಡಳಿ ನಮ್ಮ ಮನೆಯ ಪಕ್ಕಕ್ಕೇ ಇದೆ. ಮನೆಯ ಹಿಂಬಾಗದಲ್ಲಿ ವೆಂಕಟರಮಣನ ದೇವಸ್ಥಾನವಿದೆ. ಹಾಗಾಗಿ ಆಗಾಗ ಎಷ್ಟೆಲ್ಲಾ ಮೆರವಣಿಗೆಗಳನ್ನು ನೋಡುವ ಭಾಗ್ಯ ನಮ್ಮದಾಗಿದೆ. ಗಂಗಮ್ಮನ ಹೂವಿನ ಕರಗ, ರಥೋತ್ಸವ, ವೆಂಕಟರಮಣನ ಕಡೆಯ ಶ್ರಾವಣ ಶನಿವಾರದ ಉತ್ಸವ, ಮುಸ್ಲಿಮರ ಹಬ್ಬಗಳ ಹಲವು ಬಗೆಯ ಉತ್ಸವಗಳು, ಮೆರವಣಿಗೆಗಳು, ವರ್ಷಕ್ಕೊಮ್ಮೆ ಚೈತ್ರಮಾಸದಲ್ಲೋ, ವೈಶಾಖ ಮಾಸದಲ್ಲೋ ನಮ್ಮ ಮನೆಯ ಪಕ್ಕದಲ್ಲೇ ಮೂರು ದಿನ ಠಿಕಾಣಿ ಹಾಕುವ ಅಣ್ಣಮ್ಮ.. ಶುಕ್ರವಾರ ಆಕೆ ಬರುವುದು. ಅದಕ್ಕೆ ಪೂರ್ವಭಾವಿಯಾಗಿ ಆ ಸೋಮವಾರದಿಂದಲೇ ಇಡೀ ಬೀದಿ ಅಲಂಕರಿಸಿಕೊಂಡು ನಿಂತಿರುತ್ತದೆ. ಬೀದಿಯ ಮುಂಬಾಗದಲ್ಲಿ ವಿದ್ಯುದ್ದೀಪಗಳಲ್ಲಿ ಅಣ್ಣಮ್ಮನ ದೊಡ್ಡ ಚಿತ್ರ, ಬೀದಿಯುದ್ದಕ್ಕೂ ತೋರಣದಂತೆ ಬಣ್ಣ ಬಣ್ಣದ ವಿದ್ಯದ್ದೀಪಗಳು, ಮಾವು ಬೇವಿನ ತೋರಣಗಳು, ಬಾಳೆಯ ಕಂಬದ ಅಲಂಕರಣ, ಇನ್ನು ದೇವಿಯನ್ನು ಕೂರಿಸುವ ವೇದಿಕೆಯಂತೂ ಗುರುವಾರದಿಂದಲೇ ವೈಭವವಾಗಿ ಸಿದ್ಧವಾಗಿರುತ್ತದೆ. ಅಣ್ಣಮ್ಮ ಬೀದಿಯ ಕೊನೆಯಲ್ಲಿರುವಾಗಲೇ ಅವಳನ್ನು ಎದುರುಗೊಳ್ಳಲು ನಮ್ಮ ಪಕ್ಕದ ಅಡ್ಡರಸ್ತೆಯಲ್ಲಿರುವ ಗಂಗಮ್ಮದೇವಿಯ ಉತ್ಸವಮೂರ್ತಿ ಗೆಳತಿಯನ್ನು ಕರೆದುಕೊಂಡು ಬರಲು ಹೊರಡುತ್ತದೆ. ಇಬ್ಬರೂ ಒಟ್ಟಿಗೆ ಅಲ್ಲಿಂದ ಬರುತ್ತಾರೆ. ದೇವಿಯರ ಮುಂದೆ ಪೂರ್ಣಕುಂಭ ಹೊತ್ತ ಸಿಂಗಾರಗೊಂಡ ಮಹಿಳೆಯರು, ಬಾಜಾ ಬಜಂತ್ರಿ, ಆರತಿಗಳು, ಕಿವಿ ಗಡಚಿಕ್ಕುವ ಅಣ್ಣಮ್ಮನ ಭಕ್ತಿಯ ಹಾಡುಗಳು.. ಅದೇನು ಸಂಭ್ರಮ… ಮೂರುದಿನಗಳೂ ಮನೆಯ ಮುಂದೆ ಹಬ್ಬವಿದ್ದಂತೆ. ಮಾರನೆಯ ದಿನ ಅಣ್ಣಮ್ಮ ದೇವಿ ಇಲ್ಲಿನ ಆಸುಪಾಸಿನ ಬೀದಿಯಲ್ಲಿರುವ ಅರವತ್ತು ಎಪ್ಪತ್ತು ಮನೆಗಳಿಗೆ ವರ್ಷಕ್ಕೊಮ್ಮೆ ಬರುವ ಮಗಳಂತೆ ಹೋಗಿ ಪೂಜೆ ಮಾಡಿಸಿಕೊಂಡು ಉಡಿತುಂಬಿಸಿಕೊಂಡು ಬರುತ್ತಾಳೆ. ಅಂದು ಸಂಜೆ ದೇವಿಯ ಎದುರಿಗೆ ಮೂರು ಬೀದಿ ಕೂಡುವಲ್ಲಿ ಒಂದು ಸ್ಟೇಜನ್ನು ಹಾಕಿ ನಾಟಕವೋ, ಆರ್ಕೆಸ್ಟ್ರಾನೋ ಏನಾದರೊಂದು ನಡೆಯುತ್ತಿರುತ್ತದೆ. ನಮ್ಮ ಮನೆಯ ಕಾರ್ ಗ್ಯಾರೇಜೇ ಅವರಿಗೆ ಗ್ರೀನ್ ರೂಮು. ಪಕ್ಕದ ಬೀದಿಗಳಲ್ಲಿರುವ ಮುಸಲ್ಮಾನ್ ಬಂಧುಗಳೂ ಹೆಂಗಸರು, ಮಕ್ಕಳಾದಿಯಾಗಿ ಇದರಲ್ಲಿ ಮತ್ತು ಮಾರನೆಯ ದಿನ ನಡೆಯುವ ರಾಗಿ ಅಂಬಲಿ ಮತ್ತು ಅನ್ನ ಸಂತರ್ಪಣೆಗಳಲ್ಲಿ ಪಾಲುಗೊಳ್ಳುತ್ತಾರೆ. ಎಲ್ಲರನ್ನೂ ಒಂದುಗೂಡಿಸಿ ಸಂತೋಷ ಪಡಿಸುತ್ತಾ ಪರಸ್ಪರ ಬಾಂಧವ್ಯ ವೃದ್ಧಿಸುವುದರಲ್ಲಿ ಬೀದಿಯ ಪಾತ್ರವೇನು ಕಮ್ಮಿಯೇ?! ಬೀದಿ ಜಗಳಗಳ ಮಹಾತ್ಮೆ ಅತ್ಯಂತ ಪುರಾತನವಾದದ್ದು. ಬೀದಿ ಬದಿಯಲ್ಲಿ ನೀರಿಗಾಗಿ ಕಾದಾಡುವುದು; ಅಕ್ಕಪಕ್ಕದವರ ಜಗಳ ಬೀದಿಗೆ ಬರುವುದು ಇವೆಲ್ಲಾ ಬಹಳ ಸಹಜವಾದ ಕ್ರಿಯೆಗಳು. ಇಬ್ಬರೂ ಅಮ್ಮ, ಅಪ್ಪ, ಅಜ್ಜಿ, ತಾತ ಎಲ್ಲರ ಜಾಯಮಾನವನ್ನೂ ನೀವಾಳಿಸುತ್ತಾ ಕೂಗಾಡುತ್ತಿದ್ದರೆ, ಅಲ್ಲಿಯವರೆಗೆ ಗೆಳೆಯರಾಗಿದ್ದ ಅವರಿಬ್ಬರ ಮನೆಯ ನಾಯಿಗಳೂ ತಮ್ಮ ಮಾಲೀಕರನ್ನು ಅನುಕರಿಸಿ `ಭೌ…ವೌ…’ ಎಂದು ಹಿಮ್ಮೇಳ ನೀಡುತ್ತಿದ್ದರೆ ಒಂದಷ್ಟು ಕಾಲ ಜನರೆಲ್ಲಾ ಮನರಂಜನೆಯನ್ನು ತೆಗೆದುಕೊಂಡು ನಂತರ ಯಾರೋ ಒಬ್ಬರು ಹಿರಿಯರು ಇಬ್ಬರ ಮಧ್ಯ ನಿಂತು ಇಬ್ಬರಿಗೂ ಸಮಾಧಾನ

ಬೀದಿಯ ಪ್ರಪಂಚ…. Read Post »

ಇತರೆ, ವರ್ತಮಾನ

ಸಮಾಜ ಕಟ್ಟುವಲ್ಲಿ ಸಾಹಿತ್ಯದ ಪಾತ್ರ

ಲೇಖನ ಸಮಾಜ ಕಟ್ಟುವಲ್ಲಿ ಸಾಹಿತ್ಯದ ಪಾತ್ರ ಶಿವರಾಜ್ ಮೋತಿ ಸಮಾಜವೆಂದರೆ ಜನ,ಗುಂಪು ಎಂದರ್ಥವಾಗುತ್ತದೆ. ವಿಧವಿಧವಾದ ಜನ,ಅನೇಕ ಗುಂಪುಗಳು ಇರುತ್ತವೆ. ಆದರೆ ಇಂದಿನ ಸಮಾಜ ಮೂಲಭೂತವಾದಿ,ಡೊಂಗಿ ರಾಜಕಾರಣಿಗಳ ಕೈಗೆ ಸಿಕ್ಕು ವಿಲ-ವಿಲವಾಗಿ ಬಿದ್ದು ನರಳಾಡುತ್ತಿದೆ. ಸಮಾಜದಲ್ಲಿದ್ದ ನೂನ್ಯತೆಗಳನ್ನು ಸರಿಪಡಿಸಲು,ಸಮ ಸಮಾಜದ ಕನಸನ್ನು ಕಟ್ಟಲು ಹಲವಾರು ಮಾರ್ಗಗಳಿವೆ. ಅದರಲ್ಲೂ ವಿಶೇಷವಾಗಿ ಸಾಹಿತ್ಯವೂ ಒಂದು.ಸಾಹಿತ್ಯದಲ್ಲಿ ಹಲವಾರು ಪ್ರಕಾರಗಳು ಜನಪದ, ಜಾನಪದ,ಪುರಾಣ,ನಾಟಕ,ಕಲೆ, ಸಂಗೀತ ಮುಂತಾದವೆಲ್ಲವೂ ಒಂದಕ್ಕೊಂದು ಸಂಬಂಧವಿದ್ದೆ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಕಟ್ಟಲು ಅನೇಕ ಮಹನೀಯರು,ಶ್ರಮಿಸಿದ್ದಾರೆ,ಶ್ರಮಿಸುತ್ತಿದ್ದಾರೆ ಕೂಡ ಹೌದು.ಸಾಹಿತ್ಯವು ಒಡೆದ ಮನಸ್ಸುಗಳನ್ನು ಕೂಡಿಸಬೇಕೇ ವಿನಹ ಛಿದ್ರ-ಛಿದ್ರ ಮಾಡಬಾರದು. ಜಾತಿ ಅಸ್ಪೃಶ್ಯತೆಯ ತೆಕ್ಕೆಗೆ ಸಿಲುಕಿ ನರಳಾಡಿದ ಜನಕ್ಕೆ,ಧ್ವನಿಯಿಲ್ಲದ ಸಮುದಾಯಕ್ಕೆ ಧ್ವನಿಯಾಗಲು,ತಬ್ಬಲಿಗಳ ಪರ, ಅಲೆಮಾರಿ, ಆದಿವಾಸಿ,ಬುಡಕಟ್ಟು ಜನರಿಗಾಗಿ ಹೋರಾಡಲು, ಶೋಷಣೆಗೆ ಒಳಪಟ್ಟವರನ್ನು ಕಿಚ್ಚೆಬ್ಬಿಸಿ,ಅವರಿಗಾಗುವ ಅನ್ಯಾಯದ ವಿರುದ್ಧ ಸಿಡಿದೇಳಲು ಎಬ್ಬಿಸಿ,ಅವರ ಜೊತೆಗೂಡಲು ಸಾಹಿತ್ಯದ ಮೂಲಕ ಸಾಧ್ಯ.ಇಂತಹ ಕೆಲಸ ಮಾಡುತ್ತಿರುವ ದೊಡ್ಡ ದೊಡ್ಡ ಕೆಲವೇ ಸಾಹಿತಿಗಳನ್ನೂ ಹಾಗೂ ಪ್ರಚಾರ ಪಡೆಯದೇ ಮಾಡುತ್ತಿರುವ ಸಣ್ಣ-ಸಣ್ಣ ಸಾಹಿತಿಗಳನ್ನನ್ನೂ, ಹೋರಾಟಗಾರರನ್ನು ನಾವು ಇಂದು ನೋಡಬಹುದು.. ಇನ್ನೂ ಕೆಲ ಸಾಹಿತಿಗಳಿದ್ದಾರೆ,ಹೆಣ್ಣು ಸಬಲೆಯಲ್ಲ, ಅಬಲೆಯೆನ್ನುವ ಹೆಣ್ಣನ್ನು ಶೋಷಿಸುವ ಕೀಳು ಮನಸ್ಥಿತಿಗಳು,ಶೋಷಿತರನ್ನು ಶೋಷಿತರನ್ನಾಗೆ ನೋಡಬಯಸುವ,ಜಾತಿಧರ್ಮಗಳ ನಡುವೆ ಜಗಳ ಹಚ್ಚುವ ಸಾಹಿತ್ಯ ಸೃಷ್ಟಿ ಮಾಡುವುದು, ಅನ್ಯಧರ್ಮೀಯರನ್ನು ಅನುಮಾನಸ್ಥವಾಗಿ ನೋಡುವ, ಇಲ್ಲ-ಸಲ್ಲದ ಇತಿಹಾಸ ಸೃಷ್ಟಿ ಮಾಡುವುದು, ಅದು ನಿಜವಾದರೂ ಇಂದಿನ ಪರಿಸ್ಥಿತಿಗೆ ಒಗ್ಗೂಡಿಸಿಕೊಂಡು ಬದಲಾವಣೆಯನ್ನು ತರಬಯಸದೇ, ಕೋಮುಸೌಹಾರ್ದತೆಯನ್ನು ಕಾಪಾಡಿಕೊಳ್ಳದೆ ಶಾಂತಿಗೆಡುವ ಕೆಲಸವೂ ನಡೆದಿದೆ.ಅದೂ ನಿಲ್ಲಲ್ಲಿ.. ಇಂದಿನ ಉದಯೋನ್ಮುಖ ಸಾಹಿತಿಗಳು,ಕವಿಗಳು ಅವನು,ಅವಳು ಎನ್ನದೇ ಅರ್ಥಾತ್ ಪ್ರೀತಿ-ಪ್ರೇಮದ ಬಗ್ಗೆ ಬರೆಯುವುದು ಅದರಲ್ಲೂ ಭಗ್ನಪ್ರೇಮಿಯಂತೆ ಕಲ್ಪಿಸಿ ಬರೆಯುವುದು ನೋಡಿದರೆ,ಇವರಿಗೆ ಅನ್ಯ ವಿಷಯಗಳೇ ಇಲ್ಲವೇ ಎನ್ನಿಸದೇ ಇರದು.ಆದರೂ ಇವರು ಅನ್ಯವಿಷಯಗಳು ನನಗ್ಯಾಕೆ,ನಾನು ಬರೆದರೆ ಏನಾದರೂ ಬದಲಾದಿತೇ ಎಂದು ಕೀಳು ಮನಸ್ಥಿತಿಯಿಂದಲೇ ಇದಾರೆ ವಿನಹ ದೊಡ್ಡತನದಿಂದಲ್ಲ. ಸಮಾಜದಲ್ಲಿ ಅನ್ಯಾಯವಾಗುತ್ತಿದ್ದರೂ ದೈಹಿಕವಾಗಿ ಎದುರಿಸದೇ ಆಗದಿರಬಹುದು,ಕಣ್ಣುಮುಂದೆ ಅನ್ಯಾಯ ನಡೆಯದೇ, ನಡೆದೂ ಇರಬಹುದು, ದೂರದೆಲ್ಲೋ ಅನ್ಯಾಯ ನಡೆದಿರಬಹುದು ನಮಗ್ಯಾಕೆನ್ನದೇ ಅದನ್ನು ಪ್ರತ್ಯಕ್ಷವಾಗಿ ವಿರೋಧಿಸದಾಗದಿದ್ರೂ ಸಾಹಿತ್ಯದ ಮೂಲಕ ವಿರೋಧಿಸುವುದು, ಪ್ರತಿರೋಧಿಸಬೇಕೇ ವಿನಹ ಮಂಕಾಗಿ ಕುರುಡಾಗುವುದಲ್ಲ,ಅನ್ಯಾಯವನ್ನು ವಿರೋಧಿಸುವ ಕೆಲಸವಾಗಬೇಕಿದೆ. ಪರಿಸರದ ಹಾನಿಯನ್ನು ತಡೆಗಟ್ಟಲು, ಪರಿಸರಾತ್ಮಕ, ಪ್ರಾಣಿ-ಪಕ್ಷಿಗಳ ರಕ್ಷಣೆ,ಅತ್ಯಾಚಾರದ ವಿರುದ್ಧ, ಜೀವವಿರೋಧಿ, ಮಹಿಳಾ ವಿರೋಧಿ,ಮಾನವ ವಿರೋಧಿ ಮುಂತಾದವುಗಳ ಕೆಲಸ ಸಾಹಿತಿಗಳಿಂದ ತಡೆಗಟ್ಟಲು ಆಗುತ್ತಿಲ್ಲ.ನಮ್ಮ ದೇಶ ಮಹಾನ್ ಧೀಮಂತ ಪುರುಷ-ಮಹಿಳೆ ಸಾಧಕ ಮಹಾತ್ಮರನ್ನು ನೀಡಿದೆ.ಅವರು ಸಮಾಜ ಕಟ್ಟಿದ ಪರಿಯನ್ನು ನಾವು ಅಳವಡಿಸಿಕೊಂಡು ಸಾಗಬೇಕಾಗಿದೆ.ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜವನ್ನು ಕಟ್ಟಲು ಸಾಹಿತ್ಯದ ಮೂಲಕ ಕೆಲಸಗಳು ಆಗುತ್ತಿಲ್ಲ,ಆಗಬೇಕಾಗಿದೆ. ಸರ್ಕಾರದ ನಡೆನುಡಿಗಳು,ಕಾಯ್ದೆಗಳು ಎಲ್ಲ ಕಾಲಕ್ಕೂ ಪ್ರಜಾಸತ್ತಾತ್ಮಕವಾಗಿ,ಪ್ರಜೆಗಳ ಹಿತರಕ್ಷಣೆಗಾಗಿಯೇ ಇರುತ್ತವೆ ಎಂದು ಹೇಳಲಾಗದು,ಕೆಲವೊಮ್ಮೆ ಸರಕಾರಗಳು ಗೊತ್ತಿದ್ದೂ,ಗೊತ್ತಿಲ್ಲದೆಯೂ ಪ್ರಜೆಗಳ ವಿರೋಧಿ ಕಾಯ್ದೆಯೂ ತರಬಹುದು.ಅವಾಗ ಸಾಹಿತಿಗಳಾದವರು ಖಡಾಖಂಡಿತವಾಗಿ ವಿರೋಧಿಸಬೇಕು. ರಾಜಕೀಯದ ಬಗ್ಗೆ ಬೇಡವೆಂದು ತಮ್ಮ ಅಭಿಪ್ರಾಯವನ್ನು ದಾಖಲಿಸದೇ ಹೋದರೆ ಎಲ್ಲ ಕಾಲಕ್ಕೂ ಬಾಯಿಮುಚ್ಚಿ ಮೂಕಪ್ರೇಕ್ಷರಾದರೆ ಅದೆಂತಹ ದೊಡ್ಡ ಬರಹಗಾರನಾದರೂ,ಅವರು ಸಾಹಿತಿಗಳಲ್ಲ,ಅವಕಾಶವಾದಿಗಳಾಗುತ್ತಾರೆ. ಮತ್ತೊಂದೆಡೆ ಓದದೇ ಬರೆಯಬಹುದು,ಆದರೂ ಓದಬೇಕು.ಸ್ವತಃ ತಾನೇ ಮತ್ತೊಬ್ಬರದನ್ನು ಓದದೇ, ನಮ್ಮ ಭವ್ಯ ಸಾಹಿತ್ಯದ ಇತಿಹಾಸವನ್ನೋದದೇ, ಹಿಂದಿನಿಂದ ನಡೆದುಕೊಂಡು ಬಂದ ಸಮಾಜದ ಬಗ್ಗೆ ಅವಲೋಕಿಸದೆ ನನ್ನದೇ ಓದಲಿ ಅಂತ ಅನ್ನಿಸಿದ್ದನ್ನು ಗೀಚುವವರನ್ನು ಹಾಗೂ ಖುಷಿಗಾಗಿ, ಆತ್ಮಸಂತೋಷಕ್ಕಾಗಿ ಬರೆಯುತ್ತೇನೆಂದರೆ ಅಭ್ಯಂತರವಿಲ್ಲ ಆದರೆ ಅದು ಸಾಹಿತ್ಯವಾಗಲಾರದು. ಅಂತ ಬರಹಗಳಿದ್ದರೆ ನಿಮಗೂ ನಿಮ್ಮ ಬರಹಕ್ಕೂ ನೆಲೆಯಿಲ್ಲದಾಗುತ್ತದೆ.. ಒಟ್ಟಾರೆಯಾಗಿ ಏನೇ ಆಗಲಿ,ಸಾಹಿತ್ಯದ ಮೂಲಕ ಸಮಾಜವನ್ನು ಕಟ್ಟುವ ಕೆಲಸಗಳು ಆಗಲಿ, ಸಾಹಿತ್ಯವನ್ನು ಉದ್ಯೋಗ ಮಾಡಿಕೊಂಡವರಿದ್ದಾರೆ, ಜೀವನಕ್ಕಾಗಿ ಸಾಹಿತ್ಯವನ್ನು ನೆಚ್ಚಿಕೊಂಡವರಿದ್ದಾರೆ. ಉದಯೋನ್ಮುಖರಾದ ನಾವುಗಳು ಸಮಾಜದ ಸಮಸ್ಯೆ,ರೋಧನೆಗಳಿಗೆ ಸ್ಪಂದಿಸಿ ಬರಹ, ಹೋರಾಟ, ಚಳುವಳಿಗಳ ಮೂಲಕ ಇನ್ನಾದರೂ ನಮ್ಮ ಲೇಖನಿಯ ವರಸೆ ಬದಲಿಸಿಕೊಂಡು ಸಾಧ್ಯವಾದಷ್ಟು ಜೀವವಿರೋಧಿಗೆ ಪ್ರತಿಧ್ವನಿಗಳಾಗೋಣ..!!! ******************************************************

ಸಮಾಜ ಕಟ್ಟುವಲ್ಲಿ ಸಾಹಿತ್ಯದ ಪಾತ್ರ Read Post »

ಅಂಕಣ ಸಂಗಾತಿ, ಚಿತ್ತ ಜನ್ಯ

ಅಂಕಣ ಬರಹ ಎಲ್ಲಾ ಒಳ್ಳೆಯದೇ ಆಗುತ್ತೆ… ಈ ಥರದ ಮಾತುಗಳನ್ನ ನಾವು ಬಹಳಷ್ಟು ಸಾರಿ ಕೇಳಿರ್ತೇವೆ. “ಒಳ್ಳೇವ್ರಿಗೆ ಒಳ್ಳೆಯದೇ ಆಗುತ್ತೆ”, “ನಾವು ಒಬ್ರಿಗೆ ಒಳ್ಳೇದು ಮಾಡಿದ್ರೆ ದೇವರು ನಮಗೆ ಒಳ್ಳೇದು ಮಾಡ್ತಾನೆ”, “ತಾತ ಮಾಡಿದ ಪಾಪ ಮೊಮ್ನೊಗನಿಗೆ”… ಹೀಗೆ ಹಲವಾರು ಮಾತುಗಳು… ಇವೆಲ್ಲ ಬರಿಯ ಮಾತುಗಳಲ್ಲ, ಅದೊಂದು ದೈತ್ಯ ಶಕ್ತಿಯ ನಂಬಿಕೆ, ನಮ್ಮ ಬದುಕನ್ನು ಮುನ್ನಡೆಸುವ ಶಕ್ತಿ. ನನ್ನ ತಂದೆ ಒಬ್ಬ ಪ್ರಾಮಾಣಿಕ ಹೈಸ್ಕೂಲ್ ಗಣಿತದ ಮೇಷ್ಟ್ರು. ತಮ್ಮ ವಿದ್ಯಾರ್ಥಿಗಳಿಗೆ ಸ್ವಂತ ಮಕ್ಕಳ ರೀತಿಯಲ್ಲೇ ಭಾವಿಸಿ ಪಾಠ ಹೇಳಿಕೊಟ್ಟವರು. ಅವರ ಬದುಕಿನುದ್ದಕ್ಕೂ ಅವರು ನಂಬಿದ್ದು ಒಂದೇ ಒಂದು. ನಾನು ಈ ಮಕ್ಕಳಿಗೆ ಚೆನ್ನಾಗಿ ಪಾಠ ಮಾಡಿದರೆ ದೇವರು ಮುಂದೆ ನನ್ನ ಮಕ್ಕಳನ್ನ ಚನ್ನಾಗಿಟ್ಟಿರ್ತಾನೆ ಎನ್ನುವುದು. ಅದಕ್ಕೆ ಸರಿಯಾಗಿ ನಾನು ನನ್ನ ತಮ್ಮ ಓದಿ ನೌಕರಿಗೆ ಸೇರಿದ ಮೇಲೆ ಅವರಿಗೆ ಅವರ ನಂಬಿಕೆ ಮತ್ತೂ ಬಲವಾಯ್ತು. ಆದರೆ ನಮಗೆ ನಿಜ ಗೊತ್ತಿತ್ತು. ನನ್ನ ತಂದೆ ನಮಗೆ ತಿಳಿದ ಹಾಗೆ,  ನಮಗೆ ಬುದ್ಧಿ ಬಂದಾಗಿನಿಂದಲೂ ಎಂದೂ ಸಂಜೆ ಮತ್ತು ಬೆಳಗಿನ ಹೊತ್ತು, ಸಮಯವನ್ನು ವ್ಯರ್ಥವಾಗಿ ಕಳೆದವರಲ್ಲ. ಬೆಳಗ್ಗೆ ಮನೆ ಪಾಠಕ್ಕೆ (ಒತ್ತಯಕ್ಕೆ ಮಣಿದು ಉಚಿತವಾಗಿ ಪಾಠ ಮಾಡುತ್ತಿದ್ದರೇ ಹೊರತು, ಅವರೆಂದೂ ಫೀಸಿಗೆ ಮನೆ ಪಾಠ ಮಾಡಿದವರಲ್ಲ… ಯಾರೋ ಕೆಲವರು ಒತ್ತಾಯ ಪೂರ್ವಕವಾಗಿ ಉಡುಗೊರೆ ಕೊಡುತ್ತಿದ್ದರಷ್ಟೇ..) ಬರುತ್ತಿದ್ದ ಮಕ್ಕಳಿಗೆ ಪಾಠ ಹೇಳಿಕೊಡುತ್ತಿದ್ದರು, ಸಂಜೆ ನಾವಿಬ್ಬರು ಮಕ್ಕಳಿಗೆ. ಅವರು ನಾನು ಮತ್ತು ನನ್ನ ತಮ್ಮ ಬೆಳೆದು ಪಿಯುಸಿ ದಾಟುವವರೆಗೂ ಎಂದೂ ಟೀವಿಯನ್ನೇ ನೋಡಲಿಲ್ಲ, ಯಾವ ಮೋಜು ಅದು ಇದು ಎಂದು ಕಾಲಾಯಾಪನೆಯನ್ನೇ ಮಾಡಲಿಲ್ಲ. ಅವರು ಮೊದಲ ಬಾರಿ ನಿರುಮ್ಮಳವಾಗಿ ಟೀವಿ ನೋಡಲು ಶುರು ಮಾಡಿದ್ದೇ, ನಾನು ನೌಕರಿ ಸೇರಿ ಮತ್ತು ನನ್ನ ತಮ್ಮ ತನ್ನ ಹೆಚ್ಚಿನ ಓದಿಗಾಗಿ ಅಂತ ಮನೆ ತೊರೆದಾಗಲೇ. ಅವರ ಈ ಶ್ರಮ ವ್ಯರ್ಥವಾಗಲಿಲ್ಲ. ಆದರೆ ತಮ್ಮ ಇಡೀ ಬದುಕನ್ನೇ ಅವರ ವೃತ್ತಿ (ಸೇವೆ) ಮತ್ತು ಮಕ್ಕಳ ಬದುಕಿಗಾಗಿ ಮುಡುಪಾಗಿಟ್ಟ ರೀತಿ ಮಾತ್ರ ಈಗಲೂ ನನಗೊಂದು ಅಚ್ಚರಿ. ನನಗೂ ಸಹ ನನ್ನ ಮಕ್ಕಳಿಗೆ ಅಷ್ಟು ಸಮಯ ಕೊಡಲು ಒಮ್ಮೊಮ್ಮೆ ಸಾಧ್ಯವಾಗುವುದಿಲ್ಲ. ಕೆಲವೊಮ್ಮೆ ನಾನು ನನ್ನ ಮಕ್ಕಳನ್ನು ಸರಿಯಾಗಿ ಬೆಳೆಸುತ್ತಿಲ್ಲವಾ ಎನ್ನುವ ಅನುಮಾನವೂ ನನಗೆ ಕಾಡಿಬಿಡುತ್ತದೆ. ಆದರೆ ಅವರ ಒಟ್ಟಾರೆ ಬದುಕೇ ಒಂದು ಪಾಠವಾಗಿ ನನ್ನ ಮುಂದಿದೆ. ನನ್ನ ಅವಶ್ಯಕತೆ ಮತ್ತು ಪರಿಸ್ಥಿತಿಗೆ ಅನುಗುಣವಾಗಿ ಅದನ್ನು ಬಳಸುತ್ತಾ ನಡೆಯಬೇಕಿದೆ. ಒಂದಂತೂ ನಿಜವಾಯಿತು. ನನ್ನಪ್ಪ ಮಹತ್ವಾಕಾಂಕ್ಷಿಗಳಾಗಿರಲಿಲ್ಲ. ಅವರಿಗೆ ಏನನ್ನೋ ಸಾಧಿಸಬೇಕು ಎನ್ನುವ ಹಂಬಲವಿರಲಿಲ್ಲ. ಆದರೆ ತಮ್ಮ ಮಕ್ಕಳು ಸನ್ನಡತೆಯುಳ್ಳವರಾಗಿರಬೇಕು, ಸದ್ಗುಣಗಳನ್ನು ಕಲಿತಿರಬೇಕು, ಸನ್ಮಾರ್ಗದಲ್ಲಿ ನಡೆಯಬೇಕು ಎನ್ನುವುದಷ್ಟೇ ಅವರಿಗೆ ಮುಖ್ಯವಾಗಿತ್ತು. ಬೇರೆಯವರ ಒಂದು ಸಣ್ಣ ಐದು ಪೈಸೆಯನ್ನೂ ಮುಟ್ಟಬಾರದು ಎಂಬ ಪಾಠ ನಮಗೆ ಸಿಕ್ಕಿದ್ದು ಅತಿ ಸಣ್ಣ ವಯಸ್ಸಿನಲ್ಲಿ. ಇವತ್ತಿಗೂ ನಮಗಿರುವುದರಲ್ಲಿ ನಾವು ತೃಪ್ತರೇ ವಿನಃ ಮತ್ತೊಬ್ಬರ ಹಣಕ್ಕೆ ಆಸೆ ಪಡಬೇಕು ಎಂದು ಯಾವತ್ತು ಅನಿಸಿಯೇ ಇಲ್ಲ ನಮಗೆ. ಅವರು ಕೊಟ್ಟಿರುವ ಸಂಸ್ಕಾರ ಅಷ್ಟು ಗಟ್ಟಿಯಾದದ್ದು. ಇವತ್ತು ಅಪ್ಪ ಅಮ್ಮನಿಂದ ಬಹಳ ದೂರದಲ್ಲಿದ್ದು ಬದುಕುತ್ತಿದ್ದರೂ ಅವರು ಕಲಿಸಿದ ಗುಣಗಳು ಸದಾ ನಮ್ಮನ್ನು ಕಾಯುತ್ತಿವೆ, ನಡೆಸುತ್ತಿವೆ. ಕೆಟ್ಟದ್ದರ ನಡುವೆಯೂ ಒಳ್ಳೆಯದನ್ನು ಆರಿಸಿಕೊಂಡು ನಡೆಯುವುದನ್ನು ಹೇಳಿಕೊಡುತ್ತಿವೆ. ಅದರೆ ಈಗಲೂ ಅಪ್ಪ ನಂಬುತ್ತಾರೆ, “ನಾನು ನನ್ನ ವಿದ್ಯಾರ್ಥಿಗಳಿಗೆ ನಿಸ್ವಾರ್ಥದಿಂದ ಹೇಳಿಕೊಟ್ಟ ನಾಲ್ಕು ಅಕ್ಷರಗಳಿಂದಾಗಿಯೇ ದೇವರು ನನ್ನ ಮಕ್ಕಳನ್ನ ಕಾಪಾಡಿದಾನೆ” ಅಂತ. ಆದರೆ ನಾನು ನಂಬುವುದು ಮಾತ್ರ ಅವರ ಪ್ರಾಮಾಣಿಕತೆ, ನಿಸ್ವಾರ್ಥತೆ, ಪರಿಶ್ರಮ, ತ್ಯಾಗ, ಮುಗ್ಧತೆ ಮತ್ತು ಪ್ರಂಜಲ ಮನಸಿನ ಪ್ರೀತಿಯನ್ನು ಮಾತ್ರ…. ಈಗ ಯೋಚಿಸುವುದಿಷ್ಟೇ ನಾನು ನನ್ನ ಮಕ್ಕಳನ್ನು ಎಷ್ಟರ ಮಟ್ಟಿಗೆ ಪ್ರಭಾವಿಸಿದ್ದೇನೆ?! ಅವರ ಒಂದಿಡೀ ಘನ ಬದುಕಿಗಾಗುವಷ್ಟು ದಟ್ಟ ಅನುಭವಗಳನ್ನು ನಾನು ಕಟ್ಟಿಕೊಡುತ್ತಿರುವೆನಾ?! ಅವರಿಗೆ ಎಂತಹ ಮಾರ್ಗವನ್ನು ತೋರಿಸುತ್ತಿದ್ದೇನೆ ನಾನು?! ಇವತ್ತಿನ ಅಂತರ್ಜಾಲದ ಯುಗದಲ್ಲಿ ನಮಗೆ ಮೊಬೈಲಿಗಿಂತಲೂ ಪ್ರಿಯವಾದದ್ದು ಬೇರೊಂದಿಲ್ಲ. ಕಂಪ್ಯೂಟರ್, ಟೀವಿಯನ್ನೂ ಹಿಂದಿಕ್ಕಿದೆ ಈ ಮೊಬೈಲು. ಅದು ನಮ್ಮ ಜೀವನದ ಅವಿಭಾಜ್ಯ ಅಂಗವೆನಿಸತೊಡಗಿದೆ. ಊಟ ನಿದ್ರೆಯ ಜೊತೆಗೆ ನಮ್ಮ ಆಯುಷ್ಯವನ್ನೂ ಕಸಿಯುತ್ತಿವೆ ಈ ಮೊಬೈಲುಗಳು. ಸಾಮಾಜಿಕ ತಾಣಗಳೆನ್ನುವ ವರ್ಚುವಲ್ ಪ್ರಪಂಚವನ್ನೇ ಅತಿಯಾಗಿ ಹಚ್ಚಿಕೊಂಡು ಅದನ್ನೇ ಸತ್ಯ ಎನ್ನುವಂತೆ ಬದುಕುತ್ತಿದ್ದೇವೆ ನಾವು. ಮೊನ್ನೆ ಒಂದು ಕತೆ ಓದಿದೆ. ಅದು ಬಹಳಷ್ಟು ಕಡೆ ಬಹಳಷ್ಟು ಸಮಯದಿಂದ ಹರಿದಾಡುತ್ತಿದ್ದು ನನ್ನ ಗಮನಕ್ಕೂ ಬಂದಿತ್ತು. ಅದೊಂದು ಶಾಲೆ. ಅಲ್ಲೊಬ್ಬ ಶಿಕ್ಷಕಿ. ಒಂದು ದಿನ ಆಕೆ ತನ್ನ ವಿದ್ಯಾರ್ಥಿಗಳಿಗೆ “ಮುಂದೆ ನಿಮಗೆ ಏನಾಗಬೇಕೆಂದು ಆಸೆ ಇದೆ ಎನ್ನುವುದನ್ನು ಒಂದು ಪೇಪರ್ ನಲ್ಲಿ ಬರೆದು ಕೊಡಿ” ಎನ್ನುತ್ತಾಳೆ. ಎಲ್ಲ ಮಕ್ಕಳೂ ಬರೆದುಕೊಡುತ್ತಾರೆ. ಶಿಕ್ಷಕಿ ಅವನ್ನು ಕರೆಕ್ಷನ್ ಮಾಡಲಿಕ್ಕಾಗಿ ಮನೆಗೆ ತರುತ್ತಾಳೆ. ಮನೆಕೆಲಸ, ಅಡುಗೆ, ಊಟ ಎಲ್ಲ ಮುಗಿಸಿ, ದಿನನಿತ್ಯದಂತೆ ಒಂದಷ್ಟು ಹೊತ್ತು ಮೊಬೈಲ್ ನೋಡಿ, ಮಲಗುವ ಮುನ್ನ ಆ ಪೇಪರ್ ಗಳನ್ನು ಓದಲು ಶುರುಮಾಡುತ್ತಾಳೆ. ಪಕ್ಕದಲ್ಲಿ ಅವಳ ಗಂಡ ಮೊಬೈಲ್ ನಲ್ಲಿ ಮುಳುಗಿರುತ್ತಾನೆ. ಇದ್ದಕ್ಕಿದ್ದ ಹಾಗೆ ಅವಳು ಒಂದು ಪೇಪರ್ ಓದುತ್ತಾ ಅಳಲು ಶುರು ಮಾಡುತ್ತಾಳೆ. ಆಗ ಅವಳ ಗಂಡ ಯಾಕೆ ಅಳ್ತಿದಿ ಎಂದು ಕೇಳುತ್ತಾನೆ. ಆಗ ಆಕೆ ಹೇಳುತ್ತಾಳೆ, ಇಲ್ಲೊಂದು ವಿದ್ಯಾರ್ಥಿಯ ಬರೆಹ ನೋಡಿ ಅಳು ಬಂತು ಎನ್ನುತ್ತಾಳೆ. ಆಗ ಗಂಡ ಏನಂಥದ್ದು ಬರೆದಿದ್ದಾನೆ ಆ ಹುಡುಗ ಎಂದು ಕೇಳುತ್ತಾನೆ. ಆಗ ಆ ಶಿಕ್ಷಕಿ ಆ ಬರೆಹವನ್ನು ಓದತೊಡಗುತ್ತಾಳೆ, “ಮಿಸ್ ನನಗೆ ದೊಡ್ಡವನಾದ ಮೇಲೆ ಒಂದು ಸ್ಮಾರ್ಟ್ ಫೋನ್ ಆಗಬೇಕು ಅಂತ ಆಸೆ. ಯಾಕಂದ್ರೆ ಅಪ್ಪ ಅಮ್ಮ ನಂಗಿಂತ ಮೊಬೈಲನ್ನೆ ತುಂಬ ಪ್ರೀತಿಸ್ತಾರೆ. ರಾತ್ರಿ ಮಲಗುವಾಗಲು ಅದನ್ನೇ ನೋಡ್ತಾರೆ, ಬೆಳಗ್ಗೆ ಕಣ್ಣು ಬಿಟ್ಟಾಗಲೂ ಅದನ್ನೇ ನೋಡ್ತಾರೆ. ನಂಜೊತೆ ಎರೆಡು ಮಾತಾಡೋದಿಲ್ಲ, ಪ್ರೀತಿಯಿಂದ ಇರೋದಿಲ್ಲ. ಸದಾ ಮೊಬೈಲಿನಲ್ಲೇ ಮುಳುಗಿರ್ತಾರೆ. ಇನ್ನು ಕಾಲ್ ಬಂದುಬಿಟ್ಟರೆ ಮುಗೀತು. ನಾನೊಬ್ಬ ಇದೀನಿ ಎನ್ನುವುದೇ ನೆನಪಿರೋದಿಲ್ಲ ಅವರಿಗೆ. ಅದಕ್ಕೆ ನಾನೊಂದು ಸ್ಮಾರ್ಟ್ ಫೋನ್ ಆಗಬೇಕು ಅಂತ ಆಸೆ. ಆಗ ಅಪ್ಪ ಅಮ್ಮ ನನ್ನನ್ನೇ ಪ್ರೀತಿಸ್ತಾರೆ” ಎಂದು ಓದಿ ಮುಗಿಸುತ್ತಾಳೆ. ಅಷ್ಟು ಹೊತ್ತಿಗಾಗಲೇ ಗಂಡನ ಕಣ್ಣೂ ತುಂಬಿರುತ್ತದೆ. ಎಂಥದೋ ತಪ್ಪಿತಸ್ಥ ಭಾವ ಅವನನ್ನೂ ಕಾಡತೊಡಗಿರುತ್ತದೆ. ಮತ್ತೆ ಗೊಗ್ಗರು ದನಿಯಲ್ಲಿ ಆ ಹುಡುಗ ಯಾರು ಎಂದು ಕೇಳುತ್ತಾನೆ. ಆ ಹುಡುಗ ಬೇರೆ ಯಾರೂ ಅಲ್ಲ ನಮ್ಮ ಮಗನೇ ಕಣ್ರೀ ಎನ್ನುತ್ತಾ ಮತ್ತೂ ಜೋರಾಗಿ ಅಳತೊಡಗುತ್ತಾಳೆ ಆ ಶಿಕ್ಷಕಿ. ಇದಂತೂ ಬಹುತೇಕ ನಮ್ಮಲ್ಲರಿಗೂ ಅನ್ವಯಿಸುವ ಕತೆಯೇನೋ ಅನಿಸಿಬಿಟ್ಟಿತು ನನಗೆ. ನಾವು ನಮ್ಮ ಮಕ್ಕಳಿಗೆ ನ್ಯಾಬದ್ಧವಾಗಿ ಅವರಿಗೆ ಸಿಗಬೇಕಾದ ಸಮಯವನ್ನ ಕೊಡುತ್ತಿಲ್ಲದ ಅಪರಾಧಿಗಳು. ಇನ್ನು ಆ ಮಕ್ಕಳು ಬೆಳೆದಾದ ಮೇಲೆ ಇನ್ನೆಂತಹ ಮೌಲ್ಯಗಳನ್ನು ಬೆಳೆಸಿಕೊಳ್ಳಲು ತಾನೆ ಸಾಧ್ಯ. ಮಕ್ಕಳು ನೋಡ ನೋಡುತ್ತಲೇ ಬೆಳೆದುಬಿಡುತ್ತಾರೆ. ಅವರ ಬೆಳವಣಿಗೆಯ ಪ್ರತಿ ಹಂತವನ್ನೂ ನಾವು ಅಚ್ಚರಿಯಿಂದ ಕಂಡು ಆನಂದಿಸಿ ಪ್ರೀತಿಸಬೇಕು. ಅದನ್ನೇ ಮಾಡದೆ ಹೋದರೆ ಮುಂದೆ ಆ ಮಕ್ಕಳು ನಮ್ಮನ್ನು ಯಾವ ಕಾರಣಕ್ಕಾಗಿ ನೆನಪಿಡಬೇಕು… ಪೇರೆಂಟಿಂಗ್ ಕೂಡ ಬಹಳ ಜವಾಬ್ದಾರಿಯುತ ಕೆಲಸ. ಹೆತ್ತರೆ ಮಾತ್ರ ಸಾಕಾಗುವುದಿಲ್ಲ. ಮಕ್ಕಳ ಅವಶ್ಯಕತೆಗೆ ಮೀರಿ ಸೌಲಭ್ಯಗಳನ್ನು ಕೊಟ್ಟು ಗಿಲ್ಟ್ ಕಳೆದುಕೊಳ್ಳುವುದಲ್ಲ, ಅವರಿಗೆ ಕೊಡಬೇಕಾದ ಸಮಯ ಕೊಟ್ಟು ಅವರನ್ನ ಪ್ರೀತಿಯಿಂದ ಪ್ರಭಾವಿಸಬೇಕಿದೆ. ಸರಿ ತಪ್ಪುಗಳನ್ನು ಗುರುತಿಸಿ ಸರಿದಾರಿ ಕಂಡುಕೊಂಡು ನಡೆಯುವುದನ್ನು  ಕಲಿಸಿಕೊಡಬೇಕಿದೆ. ಇನ್ನದಾರೂ ಒಂದಷ್ಟು ಹೊತ್ತು ಮೊಬೈಲ್ ಬಿಸಾಕಿ ನಮ್ಮ ಮಕ್ಕಳ ಜೊತೆ ಕೂತು ಒಂದಷ್ಟು ಚಂದದ ಸಮಯವನ್ನು ಕಳೆಯಬೇಕಿದೆ ಅಂತ ಅನಿಸುತ್ತಿರುವುದನ್ನು ನನ್ನಿಂದಲೇ ಶುರುಮಾಡಬೇಕಿದೆ. ಮತ್ತೆ ಎಲ್ಲಾ ಒಳ್ಳೆಯದೇ ಆಗುತ್ತೆ ಎನ್ನುವ ನಂಬಿಕೆಯ ಬೀಜವನ್ನು ಬಿತ್ತಿಕೊಂಡು ಅದು ಮೊಳೆತು ಬೆಳೆದು ಹೆಮ್ಮರವಾಗುವುದನ್ನು ಇಂಚಿಂಚೂ ಕಾಣಬೇಕಿದೆ… ********************************** –ಆಶಾ ಜಗದೀಶ್ ಶಿಕ್ಷಕಿ, ಗೌರಿಬಿದನೂರಿನಲ್ಲಿ ವಾಸಮೊದಲ ಪುಸ್ತಕ ಮೌನ ತಂಬೂರಿ- ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಹೊಂಡಿದೆ. ನಾದಾನುಸಂಧಾನ- ಅಂಕಣ ಬರಹದ ಪುಸ್ತಕ, ಮಳೆ ಮತ್ತು ಬಿಳಿಬಟ್ಟೆ- ಕಥಾ ಸಂಕಲನ ಮತ್ತು ನಡು ಮಧ್ಯಾಹ್ನದ ಕಣ್ಣು- ಕವನ ಸಂಕಲನ (ಅಚ್ಚಿನಲ್ಲಿದೆ) ಈ ವರ್ಷ ಹೊರಬರಲಿರುವ ಪುಸ್ತಕಗಳು. ಕರ್ನಾಟಕ ಲೇಖಕಿಯರ ಸಂಘದ ಗುಡಿಬಂಡೆ ಪೂರ್ಣಿಮಾ ದತ್ತಿನಿಧಿ ಬಹುಮಾನ, ಪ್ರಜಾವಾಣಿ ದೀಪಾವಳಿ ಕವನ ಸ್ಪರ್ಧೆಯಲ್ಲಿ ಮೆಚ್ಚುಗೆ ಗಳಿಸಿದ ಕವಿತೆ, ಜೀವನ್ ಪ್ರಕಾಶನದ ಯುಗಾದಿ ಕವನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಪ್ರಜಾವಾಣಿ ಸಂಕ್ರಾಂತಿ ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಸುಧಾ ಯುಗಾದಿ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಬಹುಮಾನ, ಮುಂಬೈನ ಶ್ರೀ ಜಗಜ್ಯೋತಿ ಕಲಾಸಂಘ ನೀಡುವ ಸುಶೀಲಾ ಶೆಟ್ಟಿ ಕಥಾ ಪ್ರಶಸ್ತಿ… ಇನ್ನು ಮುಂತಾದ ಬಹುಮಾನಗಳು ಬಂದಿವೆ.

Read Post »

ಮಕ್ಕಳ ವಿಭಾಗ

ಹೋಳಿ ಹಬ್ಬದಲ್ಲಿ ಹಕ್ಕಿಪುಕ್ಕ!

ಅನುಭವ ಕಥನ  ಹೋಳಿ ಹಬ್ಬದಲ್ಲಿ ಹಕ್ಕಿಪುಕ್ಕ! ವಿಜಯಶ್ರೀ ಹಾಲಾಡಿ ಹೋಳಿಹಬ್ಬ ಬರುವುದು ಬೇಸಗೆಯ ವಸಂತಮಾಸದಲ್ಲಿ… ಅಂದರೆ ಮಾವು, ಗೇರು ಮತ್ತು ಕಾಡಿನ ಬಹುತೇಕ ಮರಗಳು ಚಿಗುರು, ಹೂ ಬಿಡುವಕಾಲದಲ್ಲಿ. ವಿಜಿಯ ಮನೆ ಹತ್ತಿರದ ಕಾಡುಗಳಲ್ಲಿ ಕೆಲವು ಮಾವಿನಮರಗಳಿದ್ದವಲ್ಲ, ಅವು ಚಿಗುರು ಬಿಡುವುದನ್ನು ನೋಡಬೇಕು! ಇಡಿ ಮರವೇ ಹೊಳೆಯುವ ಕೆಂಪು ಬಣ್ಣವಾಗಿಬಿಡುತ್ತಿತ್ತು. ಇದೇ ಸಂದರ್ಭದಲ್ಲಿ ಹೋಳಿಹಬ್ಬವೂ ತನ್ನ ಬಣ್ಣ ಸೇರಿಸಿ ಕೆಂಪು, ಹಳದಿ, ಹಸಿರು, ಕಿತ್ತಳೆ ವರ್ಣಗಳಲ್ಲಿ ಅವರ ಊರು ಹೊಳೆಯುತ್ತಿತ್ತು. ಅಲ್ಲಿ ಕುಡುಬಿ ಜನಾಂಗದವರ ಮನೆಗಳು ಸಾಕಷ್ಟಿದ್ದವು. ಅವರ ಕುಂದಾಪುರ ತಾಲ್ಲೂಕಿನಲ್ಲಿ ಕುಡುಬಿಯರು ಬಹುಸಂಖ್ಯೆಯಲ್ಲಿದ್ದಾರೆ. ವಿಜಿಯ ಬಾಲ್ಯಕಾಲದಲ್ಲಿ ಕುಡುಬಿಯರ ದಿನನಿತ್ಯದ ವೇಷಭೂಷಣಕೂಡಾ ವಿಶಿಷ್ಟವಾಗಿತ್ತು. ಹೆಂಗಸರು ಸೀರೆ ಉಡುವ ರೀತಿಯೇ ಬೇರೆ. ‘ಗೇಂಟಿ’ ಹಾಕಿ ಸೀರೆಯುಟ್ಟು ಕೊರಳಿಗೆ ಹತ್ತಾರು ಮಣಿಸರಗಳನ್ನು ಹಾಕಿಕೊಳ್ಳುತ್ತಿದ್ದರು. ತಲೆತುಂಬ ಅಬ್ಬಲಿಗೆ ಹೂ ಮುಡಿದು ಮೂಗಿಗೆ ದೊಡ್ಡ ಹರಳಿನ ಮೂಗುತಿ, ಕಿವಿಗೆ ಬೆಂಡೋಲೆ, ಬುಗುಡಿ, ಕೈತುಂಬ ಗಾಜಿನ ಬಳೆಗಳನ್ನಿಟ್ಟು ಖುಷಿ ಖುಷಿಯಾಗಿ ಅವರು ನಡೆದುಬರುವುದೇ ಒಂದು ಜಾಪು! ಕುಡುಬಿಯರು ಪ್ರತಿವರ್ಷ ಆಚರಿಸುತ್ತಿದ್ದ ಹೋಳಿಹಬ್ಬವಂತೂ ವಿಶೇಷ. ವಿಜಿ ಮತ್ತು ಗೆಳತಿಯರು ಆ ಸಮಯದ ಹೋಳಿ ಕುಣಿತವನ್ನು ನೋಡಲು ಕಾತರದಿಂದ ಕಾಯುತ್ತಿದ್ದರು. ಸರಿಸುಮಾರು ಹತ್ತು-ಹದಿನೈದು ದಿನದ ಹಬ್ಬವಿದು. ಅಮಾವಾಸ್ಯೆಯ ನಂತರ ಶುರುವಾಗಿ ಹುಣ್ಣಿಮೆಯವರೆಗೆ ಇರುವ ಹಬ್ಬ. ಕುಡುಬಿಯರು ತಮ್ಮಲ್ಲೇ ನಾಲ್ಕೈದು ಮೇಳಗಳನ್ನು ಮಾಡಿಕೊಳ್ಳುತ್ತಿದ್ದರು. ಮನೆಮನೆಗೆ ಹೋಗಿ ನೃತ್ಯ, ಕೋಲಾಟವನ್ನು ಈ ಸಂದರ್ಭದಲ್ಲಿ ಮಾಡುತ್ತಿದ್ದರು. ಗಂಡಸರು ಮತ್ತು ಚಿಕ್ಕ ಗಂಡುಮಕ್ಕಳು ಬಣ್ಣಬಣ್ಣದ ಉಡುಪು ಧರಿಸಿ ಮಣಿಸರಗಳಿಂದ ತಲೆಗೆ ಮುಂಡಾಸು, ಹೂಗಳು, ಹಕ್ಕಿ ಗರಿಗಳಿಂದ ಅಲಂಕರಿಸಿ ಕೊಂಡಿರುತ್ತಿದ್ದರು. ಭುಜಕ್ಕೆ ಗುಮ್ಟಿ(ಗುಮ್ಮಟೆ) ಎಂಬ ವಾದ್ಯವನ್ನು ಹಾಕಿಕೊಂಡು, ಕಾಲುಗಳಲ್ಲಿ ದೊಡ್ಡ ದೊಡ್ಡ ಗೆಜ್ಜೆ ಧರಿಸಿ ಉದ್ದಾನುದ್ದಕ್ಕೆ ಅವರು ನಡೆದು ಬರುವಾಗ ಇಡೀ ಗದ್ದೆ ಬಯಲೇ ಸಂಗೀತ, ಬಣ್ಣಗಳಲ್ಲಿ ಮುಳುಗಿದಂತೆ ಭಾಸವಾಗುತ್ತಿತ್ತು. ವಿಜಿಗೆ ಆಶ್ರ‍್ಯವಾಗುತ್ತಿದ್ದ ವಿಷಯವೆಂದರೆ ಬೇರೆ ದಿನಗಳಲ್ಲಿ ಗದ್ದೆ, ಹೊಲಗಳಲ್ಲಿ ತುಂಡು ಬಟ್ಟೆಯುಟ್ಟು ದುಡಿಯುತ್ತಿದ್ದ ಆ ಪರಿಚಿತ ಜನರೆಲ್ಲ ಆವತ್ತು ಗುರ್ತವೇ ಸಿಗದಂತೆ ಕಾಣುತ್ತಿದ್ದುದು! ಅಬ್ಬ, ಆ ಹೊಸ ವೇಷದಲ್ಲಿ ಅವರೆಲ್ಲ ‘ಅವರೇಅಲ್ಲ’ ಎಂಬಷ್ಟು ಚಂದ ಕಾಣುತ್ತಿದ್ದರು. ಕೆಲವು ಸಲ ರಾತ್ರಿ ಹೊತ್ತುಕುಣಿಯಲು ಬಂದರಂತೂ ಲಾಟೀನು ಬೆಳಕಲ್ಲಿ ಅವರ ಕುಡುಬಿ ಭಾಷೆಯ ಹಾಡು ಮತ್ತು ನೃತ್ಯ ನಕ್ಷತ್ರಲೋಕಕ್ಕೆ ಕರೆದೊಯ್ಯುತ್ತಿತ್ತು! ಅವರು ತಲೆಗೆ ಸಿಂಗರಿಸಿದ್ದ ಸುರಗಿ ಹೂಗಳ ಮಾಲೆ ಪರಿಮಳಿಸುತ್ತಿದ್ದವು. ಗುಮ್ಮಟೆ ಬಡಿಬಡಿದು ಕುಣಿಯುವಾಗ, ಕೋಲಾಟ ಆಡುವಾಗ ಅವರೆಲ್ಲ ಎಷ್ಟು ಚುರುಕು! ಆ ವೇಷದಲ್ಲಿದ್ದಾಗಲೂ ಗಿಡ್ಡ, ಹೆರಿಯ, ಬಾಗ್ಡು, ಬುತ್ಯ ಮುಂತಾದವರು “ಪುಟ್ಟಮ್ಮ ಎಂತಾ ಮಾಡ್ತೆ?” ಎಂದು ಮಾತಾಡಿಸಿದಾಗ ಪುಟ್ಟ ವಿಜಿಗೆ ಏನೋ ಭಯಮಿಶ್ರಿತ ಸಂತೋಷ! ತನ್ನದೇ ವಯಸ್ಸಿನ ಕೆಲವು ಮಕ್ಕಳೂ ವೇಷ ಹಾಕಿಕೊಂಡು ಬಂದದ್ದನ್ನು ನಿಬ್ಬೆರಗಾಗಿ ನೋಡುತ್ತಿದ್ದಳು. ಅವರ ಊರಲ್ಲಿ ನೆಲೆಸಿದ್ದ ಕೆಲ ಮರಾಠರೂ ಹೋಳಿ ಕುಣಿತವನ್ನು ಮಾಡುತ್ತಿದ್ದರು. ಇವರ ಉಡುಪಿನಲ್ಲಿ ಬಣ್ಣಗಳು ತುಸು ಕಡಿಮೆ. ಆದರೆ ಇವರ ಕೋಲಾಟ ಮಾತ್ರ ಅದ್ಭುತ. ಮರಾಠಿ ಭಾಷೆಯ ಹಾಡುಗಳಂತೂ ಬೇರೆಯೇ ತರಹ. ಮತ್ತೊಂದು ವಿಶೇಷವೆಂದರೆ ಇವರ ಮೇಳದಲ್ಲಿ ಒಬ್ಬ ‘ಅಜ್ಜ’ ಇರುತ್ತಾನೆ! ಅಂದರೆ; ಒಬ್ಬ ಹುಡುಗನಿಗೆ ದೊಡ್ಡದಾದ ಬಿಳಿಗಡ್ಡ, ಕಣ್ಣಿಗೆ ಕಪ್ಪುಕನ್ನಡಕ, ಕೈಗೆ ಕೋಲು, ಗಂಟೆ ಕೊಟ್ಟು ವಿಶೇಷವಾಗಿ ‘ಹೋಳಿ ಅಜ್ಜನ ವೇಷ’ ಹಾಕಿಸುತ್ತಾರೆ. ಯಾಕೆಂದು ಇವತ್ತಿಗೂ ಗೊತ್ತಿಲ್ಲ; ಆ ಅಜ್ಜನನ್ನು ಕಂಡರೆ ವಿಜಿಗೆ ವಿಪರೀತ ಭಯವಾಗುತ್ತಿತ್ತು. ಕೊನೆಯಲ್ಲಿ ಅಕ್ಕಿ, ಕಾಯಿ, ದುಡ್ಡಿನ ಸಂಭಾವನೆಯನ್ನು ಆ ‘ಅಜ್ಜ’ನ ಕೈಯ್ಯಲ್ಲೇ ಕೊಡುವುದಾಗಿತ್ತು. ಆ ಅಜ್ಜನೋ ಕೀಟಲೆ ಮಾಡಿ, ಕುಮ್ಬೆಟ್ ಹಾರಿ ಎಲ್ಲರನ್ನೂ ನಗಿಸುತ್ತಿದ್ದ. ಹಾಗೇ ಮಕ್ಕಳನ್ನು ಹೆದರಿಸುತ್ತಲೂ ಇದ್ದ. ಅಜ್ಜ ಸಂಭಾವನೆ ಪಡೆಯುವುದು ಕುಣಿತದ ಕೊನೆಯ ಹಂತ. ಆಮೇಲೆ ಬಾಯಾರಿಕೆ ಕುಡಿದು ಸ್ವಲ್ಪ ದಣಿವಾರಿಸಿಕೊಂಡು ಮತ್ತೊಂದು ಮನೆಗೆ ಮೇಳ ಹೊರಟುಬಿಡುತ್ತಿತ್ತು. ವಿಜಿಯ ಊರಿನಲ್ಲಿ ಅವತ್ತೆಲ್ಲ ಹೋಳಿಹುಣ್ಣಿಮೆಯ ಆಸುಪಾಸಿನ ಆ ಕೆಲವು ದಿನಗಳು ಕಳೆದದ್ದೇ ತಿಳಿಯುತ್ತಿರಲಿಲ್ಲ. ಬಂದು ಹೋಗುವ ಹೋಳಿಮೇಳಗಳ ಕುಣಿತ ನೋಡುವುದರಲ್ಲಿ ಹೊರ ಪ್ರಪಂಚವೇ ಮರೆತುಹೋಗುತ್ತಿತ್ತು. ಆ ಸಮಯದಲ್ಲಿ ಶಾಲೆಯಲ್ಲಿ ಬೇಸಿಗೆ ರಜೆಕೊಡುವ ದಿನಗಳು ಹತ್ತಿರವಾಗುತ್ತಿತ್ತು. ಪರೀಕ್ಷೆಗಳು ಮುಗಿದಿರುತ್ತಿದ್ದವು. ಶಾಲೆಯಲ್ಲೂ ಈ ಹೋಳಿಹಬ್ಬದ ಕುರಿತು ಮಕ್ಕಳು ಚರ್ಚಿಸುತ್ತಿದ್ದರು. ಹಾಗೇ ಮನೆಯ ಸುತ್ತಮುತ್ತ ಗೆಳತಿಯರು ಸೇರಿದರೂ ಅದೇ ಮಾತು. ಹೋಳಿ ಮೇಳ ಬಂದಾಗ ಅವರ ಬೀಚುಬೆಕ್ಕು ಹೆದರಿ ಎಲ್ಲೋ ಅಟ್ಟದ ಸಂದಿಯಲ್ಲಿ ಅಡಗಿ ಕೂರುತ್ತಿದ್ದುದನ್ನು ಆಡಿಕೊಂಡು ನಗುತ್ತಿದ್ದರು. ವಿಜಿ, ನೀಲಿಮಾ, ಮಾಣಿಕ್ಯಳಿಗೆ ವಿಚಿತ್ರ ಕಾಣುತ್ತಿದ್ದುದು ಹೋಳಿ ಜನರು ತಲೆಗೆ ಸಿಕ್ಕಿಸಿಕೊಳ್ಳುತ್ತಿದ್ದ ಹಕ್ಕಿ ಗರಿಗಳು! ಮನೆಯ ಹತ್ತಿರದ ತೋಟದಲ್ಲಿ, ಕಾಡಿನಲ್ಲಿ ಹಾರಾಡುವ ‘ಬಾಲದ ಹಕ್ಕಿ’ಯಿಂದ ಆ ಉದ್ದನೆ ಗರಿಗಳನ್ನು ಕದಿಯುತ್ತಿದ್ದರು ಎಂದು ಅವರಿಗೆ ಗೊತ್ತು. ಕೊಂಬೆಗಳಿಗೆ ಮೇಣ ಹಚ್ಚಿಟ್ಟು, ಹಕ್ಕಿ ಬಂದು ಕುಳಿತಾಗ ಉದ್ದ ಗರಿಗಳನ್ನು ಕಿತ್ತುಕೊಂಡು ಮತ್ತೆ ಕಾಡಿಗೆ ಬಿಡುತ್ತಾರಂತೆ. “ಪಾಪದ್ದು ಆ ಬಾಲದ ಹಕ್ಕಿ, ಅದಕ್ಕೆ ಎಷ್ಟು ಹೆದರಿಕೆಯಾಗುತ್ತದೋ, ಏನೋ” ಎಂದು ಮಾತಾಡಿಕೊಳ್ಳುತ್ತಿದ್ದರು. `ಅಂತಹ ಹಕ್ಕಿಗಳು ಪುನಃ ಕಾಡಿಗೆ ಹೋದಾಗ ಉಳಿದ ಹಕ್ಕಿಗಳು ಅವನ್ನು ಸೇರಿಸಿಕೊಳ್ಳುತ್ತಾವಾ?’ ಮುಂತಾಗಿ ಯೋಚಿಸುತ್ತಿದ್ದರು. ಏಕೆಂದರೆ ಒಮ್ಮೆ ಮನುಷ್ಯರು ಮುಟ್ಟಿದರೆ ಅಂತಹ ಹಕ್ಕಿ, ಅಳಿಲು ಮುಂತಾದ ಪ್ರಾಣಿ ಪಕ್ಷಿಗಳನ್ನು ಪುನಹ ಅವುಗಳ ಗೂಡಿಗೆ ಸೇರಿಸಿಕೊಳ್ಳುವುದಿಲ್ಲ ಎಂದು ಅವರು ಪುಸ್ತಕದಲ್ಲಿ ಓದಿ ತಿಳಿದುಕೊಂಡಿದ್ದರು.  “ಕಾಡಿಗೆ ಬಿಟ್ಟ ಹಕ್ಕಿಗೆ ಪುನಃ ಬಾಲ ಬೆಳೆಯುತ್ತದಾ?” ವಿಜಿ ಕೇಳುತ್ತಿದ್ದಳು. “ಹೂಂ, ಮತ್ತೆ ಬಾಲ ಬಂದಾಗ, ಮುಂದಿನ ವರ್ಷದ ಹಬ್ಬಕ್ಕೆ ಕಿತ್ತುಕೊಳ್ಳುತ್ತಾರೆ” ಎಂದು ನೀಲಿಮಾ ಹೇಳುತ್ತಿದ್ದಳು. “ಹಾಗಾದರೆ ಈ ಬಾಲದ ಹಕ್ಕಿಗೆ ಬಾಲವೇ ಇರಬಾರದಿತ್ತು, ಪಾಪ” ಎಂದುಕೊಳ್ಳುತ್ತಿದ್ದಳು ವಿಜಿ. ಮನರಂಜನೆಗಳೇ ಕಮ್ಮಿಯಿದ್ದ ವಿಜಿಯ ಊರಿನಲ್ಲಿ ಹೋಳಿಹಬ್ಬ ಒಂದು ದೊಡ್ಡ ಕುತೂಹಲಕಾರಿ ವಿಷಯವಾಗಿತ್ತು; ಹೌದು ವರ್ಷಕ್ಕೊಮ್ಮೆಅದು ಮರಳುತ್ತಿತ್ತು! ******************************************************

ಹೋಳಿ ಹಬ್ಬದಲ್ಲಿ ಹಕ್ಕಿಪುಕ್ಕ! Read Post »

ಅಂಕಣ ಸಂಗಾತಿ, ಹೊಸ ದನಿ-ಹೊಸ ಬನಿ

ಅಂಕಣ ಬರಹ ಹೊಸ ದನಿ ಹೊಸ ಬನಿ – ೧೫. ದೀರ್ಘ ಶೀರ್ಷಿಕೆಗಳ ಭಾರದಲ್ಲೂ ಸರಳ ನಡಿಗೆಯ ಮಂಜುಳ. ಡಿ  ಕವಿತೆಗಳು ಮಂಜುಳ ಡಿ ಈಗಾಗಲೇ ವಿಶ್ವವಾಣಿ ಪತ್ರಿಕೆಯ ಅಂಕಣ ಬರಹಗಾರರಾಗಿ ಕವಯತ್ರಿಯಾಗಿ ಖ್ಯಾತರಾದವರು. ಈಗಾಗಲೇ ಮೂರು ಪುಸ್ತಕಗಳನ್ನು ಪ್ರಕಟಿಸಿರುವ ಅವರು ಬೆಂಗಳೂರಿನವರು. ಅವರ ಫೇಸ್ಬುಕ್ ಬರಹಗಳಲ್ಲಿ ಗದ್ಯ ಪದ್ಯಗಳ ಮಿಶ್ರಣವನ್ನು ಕಾಣಬಹುದು. “ಆಸೆಯ ಕಂದೀಲು” ಕವನ ಸಂಕಲನಕ್ಕೆ ಕಾವ್ಯ ವ್ಯಾಮೋಹಿ ವಾಸುದೇವ ನಾಡಿಗರು ಮುನ್ನುಡಿ ಬರೆದಿರುವುದರಿಂದ ಸಂಕಲನದ ಗುಣ ನಿಷ್ಕರ್ಷೆ ಸುಲಭದ್ದೇ ಆಗಿದೆ. ಈ ಸಂಕಲನ ಕುರಿತು ಈಗಾಗಲೇ ಎನ್.ಡಿ.ರಾಮಸ್ವಾಮಿ ಮುಖಪುಸ್ತಕದಲ್ಲಿ ಬರೆದಿದ್ದಾರೆ. ಅವರು ಹೇಳಿದ ಹಾಗೆ ಈ ಕವಿ ಉತ್ತಮ ಕವನಗಳನ್ನು ಉತ್ಸಾಹದಿಂದ ರಚಿಸಿದ್ದಾರೆ.ಕಾವ್ಯದ ಕಸುಬುದಾರಿಕೆಯನ್ನು ಇಂಗ್ಲೀಷ್ ಸಾಹಿತ್ಯದ ಉಪನ್ಯಾಸಕಿಯಾಗಿ ಅಭ್ಯಾಸ ಮಾಡುತ್ತಲೇ ಇದ್ದಾರೆ. ಭಾಷೆ,ಭಾವ,ಬಂಧಗಳು ಕವನಗಳಲ್ಲಿ  ಉತ್ತಮವಾಗಿ ಮೂಡಿದೆ. ಕಾವ್ಯ ಶಿಲ್ಪದ ಕಸುಬುದಾರಿಕೆ ದಕ್ಕಿದೆ. ಅರ್ಥ ಪೂರ್ಣ ಕವನಗಳಲ್ಲಿ ಭಾವದ ಹೊಳೆ ಹರಿಸಿದ್ದಾರೆ. ಹೊಸತೇನೋ ಒಂದನ್ನು ಆತ್ಮದ ಬಾವಿಯಿಂದ ಕಾರಂಜಿಯಾಗಿಸಿದ್ದಾರೆ. ಕರುಳಿನ ಮಾತುಗಳಿಗೂ ದನಿಯಾಗಿದ್ದಾರೆ. ಅವರ ಚಿತ್ತ ಭಿತ್ತಿಯಲಿ ಸಾವಿರಾರು ಚಿಂತನೆಗಳಿವೆ. ಅವುಗಳಿಗೆ ನಿಜವಾದ ಕೈಮರ ಪೂರ್ವ ಸೂರಿಗಳ ಓದು. (ಇದು ಎನ್ಡಿಆರ್ ಮಾತು) ಇದೇ ಸಂಕಲನ ಕುರಿತು ಹೊನ್ನಾವರದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಎಂ ಹೆಗಡೆ ಹಡಿನಬಾಳ ತುಂಬು ಭರವಸೆಯ ಮಾತನ್ನು ಹೇಳಿದ್ದಾರೆ. “‘ನನ್ನನ್ನು ನೋಯಿಸಿದ್ದಾದರೂ  ಏನು” ಎನ್ನುತ್ತಲೇ ಮನಸ್ಸನ್ನು ಕದ್ದ ವ್ಯಕ್ತಿಯ ಕುರಿತು   ‘ಆಸೆಯ ಕಂದೀಲು’ ಕವನದಲ್ಲಿ  ಕಟ್ಟಿಕೊಂಡ ಆಸೆಗಳು ಕನಸುಗಳನ್ನು ತೆರೆದಿಡುವ  ರೀತಿ ಅದ್ಭುತವಾಗಿದೆ. ಊಟ  ಮಾಡುವಾಗ , ಹಾಸಿಗೆ ಬಿಟ್ಟು ಏಳುವಾಗ ಹೆಜ್ಜೆ ಹೆಜ್ಜೆಗೂ ನೆನಪಿಸಿಕೊಳ್ಳುತ್ತ  ಇನ್ನು ಎಲ್ಲೋ ಯಾರಿಗೋ ಏನೋ ತೊಂದರೆಯಾದಾಗ ತನ್ನ ಇನಿಯನಿಗೇನಾಯಿತೋ ಪರಿತಪಿಸುವ ರೀತಿ, ಒಲಿದ  ಹೃದಯದ ಸಲುವಾಗಿ ಮಿಡಿತವನ್ನು ಧ್ವನಿಸುವ ಸಾಲುಗಳು ಅದ್ಭುತ. ಪ್ರೀತಿಯ ತೀವ್ರತೆ ಹಂಬಲ ಕಳವಳ ಕನವರಿಕೆಯೇ ಮನದಾಳದ ನೋವಿಗೆ ಕಾರಣ ಎನ್ನುವುದರ ಮೂಲಕ ಪ್ರೀತಿಯ ಆಳ ಹರಹನ್ನು ಅತ್ಯಂತ ಸುಂದರವಾಗಿ  ಚಿತ್ರಿಸಿದ್ದಾರೆ. ಒಮ್ಮೆ ಮನಸ್ಸನ್ನು ಕೊಟ್ಟ ನಂತರ ಅವರ ನೆನಪಿನ ತೀವ್ರತೆ ಅಗಾಧ ಎನ್ನುವ ಸತ್ಯವನ್ನು ‘ತೀವ್ರತೆ ಎಷ್ಟಿತ್ತೆಂದರೆ’ ಕವನದ ಮೂಲಕ ತೆರೆದಿಟ್ಟಿದ್ದಾರೆ. ಇನಿಯನ ಸನಿಹ ತರುವ ಖುಷಿಯನ್ನು ಪ್ರಕೃತಿಯ ಆಗುಹೋಗುಗಳೊಂದಿಗೆ  ಸಮೀಕರಿಸಿ ‘ ಸುಮ್ಮನೆ ನಿನ್ನೊಂದು ಇರುವಿಕೆ ‘ ಕವನದ ಮೂಲಕ ಮಾರ್ಮಿಕವಾಗಿ ಚಿತ್ರಿಸಿದ್ದಾರೆ. ‘ಅಣಿಯಾಗದಿದ್ದ  ಗಳಿಗೆಯಲ್ಲಿ ಮಾಧುರ್ಯವನ್ನು ಪಸರಿಸಿ ಇದೀಗ ನಿನ್ನದೇ ಆದ ನೋವಿನ ಪ್ರಪಂಚದಲ್ಲಿ ನೀನಿರುವುದು ಸರಿಯೇ?’,   ‘ನಿರ್ಲಿಪ್ತತೆಯ ತೊಡೆದು ಹಾಕಿ ನೋವಿನಲ್ಲೂ ಸಪ್ತ ಸ್ವರ ಹೊಮ್ಮಲು ಸಾಧ್ಯವಿಲ್ಲವೇನು?’ ಎಂದು ‘ ಜಗತ್ತಿನ ನೋವೆಲ್ಲಾ ಒಂದಾದರೆ ನಿನ್ನ ನೋವೇ ಒಂದು’ ಕವನದ ಮೂಲಕ ಮೆಚ್ಚಿದ ಇನಿಯನನ್ನು ಪ್ರೀತಿಯಿಂದ ತರಾಟೆಗೆ ತೆಗೆದುಕೊಳ್ಳುವ ಪರಿ ಸೊಗಸಾಗಿ ಮೂಡಿಬಂದಿದೆ . ಮನೆಯನ್ನು  ಸುಂದರಗೊಳಿಸಿ ಗೋಡೆಗಳನ್ನು ಅದೆಷ್ಟೇ ಅಲಂಕಾರ ಗೊಳಿಸಲಿ ಯಾರಿಗೂ ಏನನ್ನೂ ಕೊಡದೆ ಕೃಪಣರಾಗಿ ತನ್ನವರಿಗಾಗಿ ಅದೆಷ್ಟೇ ಕೂಡಿ ಇಟ್ಟಿರಲಿ ಪ್ರಕೃತಿ ಮುಣಿಯಲು ಇವೆಲ್ಲವೂ ನೀರುಪಾಲಾಗಲು ಎಷ್ಟು ಹೊತ್ತು… ಯಾವ ತುಂಡು ಭೂಮಿಗಾಗಿ ಕಚ್ಚಾಡುತ್ತಿರುತ್ತೇವೆಯೋ ಅವು ಗುಡ್ಡ ಕುಸಿತದೊಂದಿಗೆ  ಮಣ್ಣುಗೂಡಲು ಎಷ್ಟು ಹೊತ್ತು ಎನ್ನುವುದನ್ನು ‘ಜಲವರ್ಣ ಚಿತ್ರ ಮಳೆಯಲ್ಲಿ ಕರಗಿದೆ’  ಎನ್ನುವ ಕವನದ ಮೂಲಕ ಚೆನ್ನಾಗಿ ಚಿತ್ರಿಸಿ ಪ್ರಕೃತಿಯ ಮುಂದೆ ಮಾನವನ ಆಟ ನಡೆಯದು ಅರ್ಥವಿಲ್ಲದ ಹಗೆತನ ಜಿಪುಣತನ ಸರಿಯಲ್ಲ ಎನ್ನುವ ಸಂದೇಶವನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ‘ನಿನ್ನನ್ನು ನೋಡಿದ ಮೇಲೆ ಈಗ ಇನ್ಯಾರನ್ನುನ್ನು ನೋಡಲಿ’, ‘ನಿನ್ನೊಳಗೆ ಕರಗಿ ನಿನ್ನದೇ ಬಣ್ಣ ತಳೆದದ್ದು ಅರಿವಿಗೇ ಬರಲಿಲ್ಲ’ ಸಾಲುಗಳು ಪ್ರೀತಿಯ ಪರಾಕಾಷ್ಟತೆಯನ್ನು  ಭಾವನೆಯ ತೀವ್ರತೆಯನ್ನು ಪ್ರತಿಬಿಂಬಿಸಿದರೆ, ವಿರಹಿ, ರಿಪೇರಿ, ಕಾವು ಅಗಲಿಕೆ ಧೋರಣೆ, ಬಿಂಬ.. ಪ್ರೀತಿಯಿಂದ ಘಾಸಿಗೊಂಡ ಮನದ ಅಂತರಾಳದ ಧ್ವನಿಯಂತೆ ಇವೆ. “ಆಸೆಯ ಕಂದೀಲು” ಸಂಕಲನ ಕುರಿತ ಈ ಇಬ್ಬರ ಮಾತುಗಳನ್ನು ನಾನು ಸಂಕಲನ ನೋಡಿರದ ಕಾರಣ ಆ ಸಂಕಲನ ಕುರಿತಂತೆ ಮಹತ್ವದ್ದೆನಿಸಿದ ಕೆಲವು ಸಾಲುಗಳನ್ನು ಇಲ್ಲಿ ಹಂಚಿಕೊಳ್ಳುತ್ತಲೇ ಈ ಕವಿಯು ಫೇಸ್ಬುಕ್ಕಿನಲ್ಲಿ ಪ್ರಕಟಿಸಿದ ಕೆಲವು ಕವಿತೆಗಳನ್ನು ಪರಿಚಯಿಸುತ್ತಿದ್ದೇನೆ. ನದಿಯ ಪಾತ್ರ ಅಲ್ಲಿಯೇ ಇದೆ ಅದರ ಉದಯ ಕಾಲದಿಂದಲೂ ಹರಿಯುತ್ತಿರುವ ನೀರು ಮಾತ್ರ ಹೊಸದು ಎನ್ನುವ ನಿಲುವು ಹಳೆಯದೇ ಆದರೂ ಹರಿಯುತ್ತಿರುವ ನೀರು ಹೊಸದೇ ಆಗಿರುತ್ತದೆ ಎನ್ನುವ ಆಲೋಚನೆಯನ್ನು ಸೊಗಸಾಗಿ ಹೇಳುವ ಈ ಕವಿ  “ಭೌತಿಕತೆಯ ಗೀಳು ಮಾನಸಿಕ ಹರಿವು‌‌…” ಎನ್ನುವ ದೀರ್ಘ ಶೀರ್ಷಿಕೆಯ ಗಪದ್ಯದಲ್ಲಿ ಹೇಳುತ್ತಾರೆ. “ಕೆಂಪು ಡಬ್ಬ ಮತ್ತು ಕಾಗದದ ದೋಣಿ…” ಕವಿತೆಯ ಶೀರ್ಷಿಕೆಯೇ ಕುತೂಹಲ ಹೆಚ್ಚಿಸಿ ಆಧುನಿಕ ಫೋನುಗಳಿಗಿಂತಲೂ ಹೃದಯಕ್ಕೆ ಹತ್ತಿರವಾದ ಪತ್ರಗಳ ಮಹತ್ತನ್ನು ಹೇಳುತ್ತದೆ. “ತೆರೆ ಅಪ್ಪಳಿಸುವ ಗಳಿಗೆ…ಭಾನು ಭುವಿಯಲ್ಲಿ ಲೀನ” ಎನ್ನುವ ಪದ್ಯದ ರೀತಿ ಸೊಗಸಾಗಿದ್ದರೂ ಭಾನು ಎನ್ನುವುದು ಸೂರ್ಯನಿಗೆ ಬಾನು ಎಂದರೆ ಆಕಾಶ ಎನ್ನುವ ವ್ಯತ್ಯಾಸದ ಅರಿವು ಬಾರದೇ ಇದ್ದರೆ ಪದ್ಯ ಗೆದ್ದುಬಿಡುತ್ತದೆ. ಆಕಾಶ ಭೂಮಿಗಳು ಪರಸ್ಪರ ಮುಟ್ಟಿದರೂ ಮುಟ್ಟದೆಯೇ ಉಳಿವ ಕ್ಷಿತಿಜದ ಅರಿವು ಕೂಡ ಕವಿಯಾದವರಿಗೆ ಇರಲೇ ಬೇಕಾಗುತ್ತದೆ. “ಜಲವರ್ಣ ಚಿತ್ರ ಮಳೆಯಲ್ಲಿ ಕರಗಿದೆ…” ಎನ್ನುವ ಹೆಸರಿನ ಕವಿತೆಗೆ ಷರಾ ಬರೆದು ಕೊಡಗಿನ ಬಿರುಮಳೆಗೆ ಕುಸಿದ ನೆಲ ಕುರಿತ ಪದ್ಯವೆಂದು ಕವಿ ಹೇಳಿದರೂ ಈ ಕವಿತೆಯ ಮೊದ ಮೊದಲ ಸಾಲುಗಳು ಪ್ರತಿಧ್ವನಿಸುವುದು ಕಳೆದುಕೊಂಡ ಕನಸುಗಳನ್ನು, ಪ್ರೀತಿಯಿಂದ ಕಾಪಿಟ್ಟಿದ್ದನ್ನು ಕಳಕೊಂಡ ನೋವನ್ನು. “ಕತ್ತಿ ಮಚ್ಚು ಹಿಡಿದು ಹಗಲಿರುಳೂ ಸಾಧಿಸಿದ ಹಗೆ ಏಳೆಂಟು ಅಡಿ ಗುಡ್ಡದ ಭೂಮಿ ತನ್ನದೆನ್ನುವ ಒಡಹುಟ್ಟಿದವರ ಹಗೆತನವೂ ಕುಸಿದ ಗುಡ್ಡದೊಂದಿಗೆ ಈಗ ನಿನ್ನದೇ” ಎನ್ನುವ ತಿಳುವಳಿಕೆ ಲೋಕಕ್ಕೆಲ್ಲ ತಿಳಿದರೆ ಅದೆಷ್ಟು ಸಲೀಸು ಈ ಬದುಕು! ಆದರೆ ವಾಸ್ತವ ಹಾಗಿಲ್ಲವಲ್ಲ! “ಕುಸುಮಿತ ತೋಪಿನ ಹೂವಿನ ನವಿರು ಪರಿಮಳ, ಉರಿಬಿಸಿಲ ಪ್ರಖರತೆ ಊಹೂ ಹೆಜ್ಜೆಗಳು ನಿಲ್ಲುವ ಹಾಗಿಲ್ಲ ಮಾಡಿಕೊಂಡ ಪಣಗಳು ಕೊಟ್ಟ ಭಾಷೆಗಳು ದೂರ ದೂರ ಪಯಣ ಸಾಗಿದೆ ಹೀಗೆ ಸಾಗುತ್ತಿದೆ” ಎನ್ನುವ ವಿವೇಕದೊಂದಿಗೆ “ಆನೆ ಕುದುರೆ ಗಾಡಿಗಳಲ್ಲಿ ಸಾಗಲಾರೆವು ಅಲ್ಲಿಗೆ ಹೆಜ್ಜೆಗಳೇ ಮೂಡಬೇಕು…” ಎನ್ನುವ ಶೀರ್ಷಿಕೆಯ ಪದ್ಯ ಕೂಡ ಚಣಕಾಲ ಕಾಡದೇ ಇರದು. ನವೋದಯದ ಕಾಲದಲ್ಲಿ ಪ್ರಾಸ,ಗೇಯತೆ,ರಮ್ಯತೆಗಳಿದ್ದರೆ ಪ್ರಗತಿಶೀಲರ ಕಾಲದಲ್ಲಿ ಕನಸುಗಳೇ ರಾಜ್ಯಭಾರ ಮಾಡುತ್ತ ನವ್ಯವು ಪ್ರತಿಮೆ ರೂಪಕಗಳಲ್ಲಿ ಭಾರವಾಗುತ್ತ ಸಾಗಿದ್ದು ಬಂಡಾಯದ ಬಿಸಿಯುಸಿರು ವ್ಯವಸ್ಥೆಯೊಂದಿಗೆ ಸೆಣಸಾಟ ಈ ಎಲ್ಲವೂ ಹೊಸ ಕಾಲದ ಪದ್ಯಗಳಲ್ಲಿ ಭಿನ್ನ ರೀತಿಯಲ್ಲಿ ಮಿಶ್ರಣಗೊಂಡು ಸುಲಭಕ್ಕೆ ದಕ್ಕದ ರೀತಿಗೆ ಚಾಚಿಕೊಳ್ಳುತ್ತ ಕಾವ್ಯದ ನಡಿಗೆಯನ್ನು ಸುಲಭಕ್ಕೆ ಒಲಿಸಿಕೊಳ್ಳಲಾಗದ ಕಾಲ ಇದು. ಆದರೂ ಹೊಸ ದನಿಯಲ್ಲಿ ಧಂಡಿಯಾಗಿ ಹಾಡುವರ ಕಾಲದ ಹಾಡುಗಳನ್ನು ಅಳೆಯುವ ಮಾಪಕಗಳೇ ಇರದ ಈ ಕಾಲದ ಕವಿಗಳು ಪರಂಪರೆಯಿಂದ ಅರ್ಥವಾದ ರೀತಿಗೆ ಹೊಸ ಟ್ಯೂನ್ ಕೊಡುತ್ತಲೇ ಇದ್ದಾರೆ. ಅಂಥವರ ಪೈಕಿ ಮಂಜುಳ ಡಿ ಕೂಡ ಒಬ್ಬರು. ಬರಿಯ ಚುಟುಕುಗಳಲ್ಲೇ ಹೇಳಬೇಕಾದುದನ್ನು ಹೇಳುತ್ತಿರುವವರ ನಡುವೆ ತಮ್ಮ ದೀರ್ಘವೂ ಸ್ವಾರಸ್ಯವೂ ಆದ ಶೀರ್ಷಿಕೆಗಳ ಮೂಲಕ ಕಾವ್ಯವನ್ನು ಪ್ರಸ್ತುತ ಪಡಿಸುವ ಶೈಲಿ ಬೇರೆಯದೇ ಆಗಿದೆ. ಆದರೆ ಹೇಳಿಕೆಗಳ ಭಾರದಲ್ಲಿ ಕವಿತೆ ನಲುಗಬಾರದೆನ್ನುವ ಕಾವ್ಯ ಮೀಮಾಂಸಕರ ಮಾತು ಯಾರೂ ಮರೆಯಲಾರದ್ದು ಭೇಟಿಯಾಗದ ಭೇಟಿಗಳ ಬಗ್ಗೆ ಪ್ರೀತಿ, ಹಳಹಳಿಕೆ, ನೆನಪು, ಸಂಕಟಗಳ ಒಟ್ಟೂ ಮೊತ್ತವನ್ನು ಅದ್ಭುತವಾಗಿ ಅಭಿವ್ಯಕ್ತಿಸಿದ ಕೆಲವು ಟಿಪ್ಪಣಿಗಳೇ ಇಲ್ಲಿ ಕವಿತೆಯಾದ ಘನಸ್ತಿಕೆಯೂ ಇದೆ. ಬರಿಯ ಪ್ರೀತಿ ಪ್ರೇಮ ಕನಸುಗಳಿಗಷ್ಟೇ ತಮ್ಮ ಕವಿತೆಗಳ ಹರಹನ್ನು ಸೀಮಿತಗೊಳಿಸದೇ ಬದುಕಿನ ಹಲವು ವಿಸ್ತರಗಳ ಕಡೆಗೂ ಗಮನ ಸೆಳೆಯುವ ಈ ಕವಿಯ ಮುಂದಿನ ರಚನೆಗಳ ಬಗ್ಗೆ ಕುತೂಹಲ ಹೆಚ್ಚುತ್ತಲಿದೆ. ಘೋಷವಾಕ್ಯವು ಕವಿತೆಯಾಗುವುದಿಲ್ಲ‍ ಮತ್ತು ಕವಿತೆಯಾಗಿ ಗೆದ್ದವು ಅನುದಿನದ ಘೋಷ ವಾಕ್ಯಗಳೇ ಆಗಿ ಬದಲಾಗುತ್ತವೆ ಎನ್ನುವ ಕಿವಿಮಾತಿನೊಂದಿಗೆ ಈ ಕವಿಯ ಕೆಲವು ರಚನೆಗಳನ್ನು ನಿಮ್ಮ ಓದಿಗಾಗಿ ಶಿಫಾರಸು ಮಾಡುತ್ತಿದ್ದೇನೆ. ೧. ಭೌತಿಕತೆಯ ಗೀಳು ಮಾನಸಿಕ ಹರಿವು‌‌… ನದಿಯ ಪಾತ್ರ ಅಲ್ಲಿಯೇ ಇದೆ ಅದರ ಉದಯ ಕಾಲದಿಂದಲೂ ಹರಿಯುತ್ತಿರುವ ನೀರು ಮಾತ್ರ ಹೊಸದು ಅದೇ ಹಳೇ ಆಲದ ಮರ ಅದೇ ನೆರಳು ವಿಶಾಲತೆ ಚಿಗುರು ಟಿಸಿಲೊಡೆದು ಮೂಡಿದ ನವಿರು ಹಸಿರು ಕಿರು ತೋಟದ ಅದೇ ರೋಜಾ ಗಿಡ ನೆನ್ನೆಯೂ ಹೂ ಬಿಟ್ಟಿತ್ತು ಇಂದೂ ಬಿಟ್ಟಿದೆ ಆದರೆ ದಳಗಳ ವಿನ್ಯಾಸ ಮಾತ್ರ ನೂತನ ಅವೇ ಸ್ವರಗಳು ಹೊಸ ಹೊಸ ವಿನ್ಯಾಸ ಲಯದಲ್ಲಿ ಹೆಣೆದು ಹೊಮ್ಮುವ ರಾಗಗಳ ನವೀನ ವಿನ್ಯಾಸಗಳು ಮರ ಗಿಡ ಹೂ ನದಿ ಕಡಲು ಎಲ್ಲಾ ಲೋಕಗಳಿಗೂ ಶೇಖರಣೆಯ ತೆವಲಿಲ್ಲ ಅರೆಗಳಿಯಲ್ಲಿ ಮೊಬೈಲಿನಲ್ಲಿ ತೆಗೆದ ನೂರಾರು ಚಿತ್ರಗಳ ಭೌತಿಕತೆ ಒಂದೆರಡು ಸೃಷ್ಟಿಸುವಲ್ಲಿ  ವರ್ಣಚಿತ್ರ ಕಲಾವಿದನಿಗೆ ಅವಧಿಯ ಗಣನೆಯೆಲ್ಲಿ ಇದು ಮಾನಸಿಕ ಹರಿವು ಅದೇ ಕ್ಷಿತಿಜ ಅದೇ ಭೂಮಿ ಇಚ್ಛಿತ ಜೀವದೊಂದಿಗೆ ಲಯಗೊಂಡರೆ ಹೊಸದೊಂದು ಬಣ್ಣ ಪಡೆವ ಹಾಗೆ ಇಬ್ಬರ ನಡುವಿನ ಗೆರೆಯೂ ಅಳಿಸಿದ ತಾದಾತ್ಮ್ಯ ಭಾವ ಇಷ್ಟಕ್ಕೂ ನವೀನ ಗಳಿಗೆಗಳು ನವ ಅನುಭವ ಅಂದರೆ ಹೊಸ ವಿವರಗಳಲ್ಲ ಹಿಂದಿನ ಮುಂದಿನ ಅಡ್ಡ ಉದ್ದ ಹೆಸರುಗಳೆಲ್ಲಾ ಮರೆತು ಹೊಸ ಗಳಿಗೆಯೊಂದಕ್ಕೆ ಮನಸು ಹರಿಬಿಟ್ಟ ಗಳಿಗೆ ದಣಿವಿಲ್ಲದೇ ಹೊಸತನ ಚಲನಶೀಲತೆ ಮೂಡಿ ಆತ್ಮದ ಲಯದೊಂದಿಗೆ ಚೇತೋಹಾರಿಯಾಗಿ ಬೆಸೆಯುವ ಚೇತನ… ೨.  ಕೆಂಪು ಡಬ್ಬ ಮತ್ತು ಕಾಗದದ ದೋಣಿ… ಬರಿಯ ಟಪಾಲುಗಳಿಲ್ಲ ಈ ಕೆಂಪು ಡಬ್ಬಿಯಲ್ಲಿ ನೂರಾರು ಕೈಗಳು ದಾಟಿ ನೂರಾರು ಗಾವುದ ತೆರಳಿ ಯಾರದೋ ಸ್ಪರ್ಶಕ್ಕೆ ಕಾದಿರುವ ಸ್ವಗತಗಳು ಮುಖತಃ ಮಾತಾಗದ ಹೇಳಲೇಬೇಕಾದ ಎಷ್ಟೋ ಮಾತುಗಳಿಗೆ  ಕನಸು ಸಮಾಧಾನ ಎಚ್ಚರ ತಪ್ಪೊಪ್ಪಿಗೆ ನೆನಪು ಎಲ್ಲಾ ಸ್ವಗತಗಳು ಪದಗಳಲ್ಲಿ ಸ್ಪಷ್ಟಗೊಳ್ಳುವ ಹಾದಿ ಎಷ್ಟೋ ದೂರ ಪಯಣಿಸಿ ಬಂದ ಕಾಗದ ಒಡೆಯುವ ಗಳಿಗೆಯ ಉಸಿರ ಕಂಪು ಆತ್ಮಿಕ‌ ಸಂವಾದವೊಂದರ ಹರವು ಜೀವಕ್ಕೆ ಉಣಿಸಬಹುದಾದ ಹಿತ ಬರೀ ಫೋನುಗಳು ಪತ್ರದ ಹಂಗೆಲ್ಲಿ ಈಗ…! ಭಾವ ಭೂಮಿಕೆಯ  ಹರಿಸಿ ನಿಂತ ಪತ್ರವನ್ನೊಮ್ಮೆ ಹಿತವಾಗಿ ನೇವರಿಸಿ ಅಕ್ಷರಗಳಾದ ಸ್ವಗತ  ಕಣ್ತುಂಬಿಕೊಳ್ಳುವ ವಿಸ್ಮಯದಲ್ಲಿ ವಿಹರಿಸುವ ತವಕ  ಕೆಂಪುಡಬ್ಬಿಯ ನೋಡಿದಾಗ ಮೂಡದಿರದೇ… ೩.ತೆರೆ ಅಪ್ಪಳಿಸುವ ಗಳಿಗೆ…ಭಾನು ಭುವಿಯಲ್ಲಿ ಲೀನ ದೃಷ್ಟಿ ಹಾಯಿಸಿದಷ್ಟೂ ನಿನ್ನ ಹರವು ನೀಲಾಕಾಶದ ಬಣ್ಣ ತಳೆದು ನೀಲೀ ತಟ್ಟೆಯಂತೆ ತಂಪಗಿದ್ದೆ ದಣಿವಿಲ್ಲ ಮೋಡಗಳಿಗೆ ಅದೆಷ್ಟು ತಡೆದಿದ್ದವೋ ಛಿದ್ರಗೊಂಡು ಅದೆಷ್ಟು  ಸುರಿದರೂ ತೀರದ ನೋವು ಮಳೆಯ ಅಗಾಧತೆಗೆ ಉಲ್ಬಣಗೊಂಡ ಪರಿ ಮಕ್ಕಳು ಕುಂಚ ಅದ್ದಿ ತೆಗೆದ ನೀರಿನಂತೆ  ವಿಹ್ವಲ ವರ್ಣಕ್ಕೆ ಭಾನು ಇಳೆಗಿಳಿದಿದೋ ಕಡಲೇ ಭಾನುವಿನತ್ತ ಧಾವಿಸಿದೆಯೋ ದಿಕ್ಕುಗಳಾದರೂ ಎಲ್ಲಿ ಎಲ್ಲಾ ನಾದಗಳೂ ಬಣ್ಣಗಳೂ ಹಂಗು ಹಮ್ಮುಗಳು ಲಯ ಕಳೆದುಕೊಂಡ ಈ ರುದ್ರಘೋಷ ಅದೆಷ್ಟು ತಪನ ತನ್ಮಯತೆಯಿಂದ ಕಾದ ತವಕದ ತೀವ್ರತೆ ಮಿತಿ‌ ಕಳೆದು ತೆರೆ ಅಪ್ಪಳಿಸುವ ಗಳಿಗೆ ಜಲದಲ್ಲಿ ಜಲ ಒಂದಾಗುವ ಗಳಿಗೆ ಭಾನು ಭೂಮಿಯಲ್ಲಿ ಲೀನ ೪. ಜಲವರ್ಣ ಚಿತ್ರ ಮಳೆಯಲ್ಲಿ ಕರಗಿದೆ… ನೆನ್ನೆಯಷ್ಟೇ  ಚಂದಗೊಳಿಸಿದ್ದ ಗೋಡೆಯ ಬಣ್ಣಗಳು ಮುರಿದುಬಿದ್ದ ಹೆಂಚುಗಳೊಂದಿಗೆ ಬಣ್ಣ ಹಂಚಿಕೊಂಡಿವೆ ಅದೆಷ್ಟೊ ಬೆಲೆಯಿತ್ತು ತಂದು ಅಷ್ಟೇ ಬೆಲೆಯ  ಫ್ರೇಮಿನಲಿ  ಸಿಕ್ಕಿಸಿಟ್ಟು ಬೀಗಿದ ಜಲವರ್ಣ ಚಿತ್ರ ಮಳೆಯಲ್ಲಿ ಕರಗಿದೆ ಆಳು ಕಾಳಿಗೂ  ಬೇಡಿ ಕೇಳಿದವರಿಗೂ ನೀಡದೇ ಮುಂದೆ ಬೇಕಾದಿತೆಂದು ಪೇರಿಸುತ್ತಲೇ ಇಟ್ಟ ಧವಸ ನೆನಸಿ ಬೇಯಿಸುವ ಗೋಜಿಲ್ಲ ಧುತ್ತೆಂದು ಇಂದು ತಾನೇ-ತಾನಾಗಿ  ಧಾರೆಯಲಿ ನೆನಸಿಕೊಂಡಿವೆ ಯಾರದೋ ಬಂಗಲೆಯ ಮುಂದಿನ ಗಣಪ ಪಕ್ಕದ

Read Post »

ನಿಮ್ಮೊಂದಿಗೆ

ಅಂಬರ ಫಲ!

ಕವಿತೆ ಅಂಬರ ಫಲ! ಗಣಪತಿ ಗೌಡ ಅಂಬರದಲಿ ತೂಗುತಿಹುದುಒಂದೇ ಒಂದು ಹಣ್ಣು,ಬೆಳದಿಂಗಳ ರಸವೇ ಕುಡಿದು––ತಂಪು ರಸಿಕ ಕಣ್ಣು!/ಅಂಬರದಲಿ. ……// ಕೆಲ ದಿನದಲಿ ಕರಗಿ ಬಲಿತುತುಂಬಿ ಪೂರ್ಣ ಪ್ರಾಯ!ಹೊರ ಸೂಸಿದೆ ಹೊನ್ನ ಕಿರಣಕುಡಿದು ಹೊನ್ನ ಪೇಯ!/ಅಂಬರದಲಿ……….// ಹೊಂಬೆಳಕದು ಸುರಿವ ಜೇನು!ಚಪ್ಪರಿಸುತ ಜಿಹ್ವೆ,ಮುಳುಗೇಳುತ ಆನಂದದಿ,ಮರೆತು ಎಲ್ಲ ನೋವೇ!/ಅಂಬರದಲಿ……….// ತಂಪು ಬೆಳಕ ಬೆರಳಿನಲ್ಲಿನೇವರಿಸುತ ಎಲ್ಲ,‘ಶಾಂತಗೊಳ್ಳಿ’ ಎನುವ ತೆರದಿಸವರುತೆಲ್ಲ ಗಲ್ಲ! /ಅಂಬರದಲಿ………..// *****************************************

ಅಂಬರ ಫಲ! Read Post »

ಜೀವನ

“ಉಳ್ಳವರು ಶಿವಾಲಯವ ಮಾಡುವರು”

ಅನಿಸಿಕೆ “ಉಳ್ಳವರು ಶಿವಾಲಯವ ಮಾಡುವರು” ವೀಣಾ ದೇವರಾಜ್           ನಿಜಕ್ಕೂ ಅಣ್ಣನ ಈ ವಚನವು ಬರಿಯ ಪುಸ್ತಕಗಳಿಗೆ ಮತ್ತು ಹಾಡುಗಾರರಿಗೇ ಸೀಮಿತವಾಗಿವೆ. ಕಾರ್ಯರೂಪಕ್ಕೆ ಬರುವುದೆಂದೊ. ಹಿರಿಯರು ‘ಉಳ್ಳವರು ಶಿವಾಲಯವ ಮಾಡುವರು ‘ ಎಂದರು, ಆದರೆ ಇಂದಿನ ಉಳ್ಳವರು ತಮಗಾಗಿ ತಮ್ಮ ಕುಟುಂಬಕ್ಕಾಗಿ ಮಾತ್ರ ಆಲಯ ಮಾಡಿಕೊಳ್ಳುವರೇ ಹೊರತು ಸಮಾಜಕ್ಕಾಗಿ ಯಾವ ಉಪಯೋಗಕ್ಕೂ ಬಾರದು. ಇಂಥಹವರಿಂದ ಪರಿವರ್ತನೆ ಬಯಸುವುದು ಸಾಧ್ಯವೇ?        ಆಯ್ದಕ್ಕಿ ಲಕ್ಕಮ್ಮ, ಮಾರಯ್ಯ ದಂಪತಿಗಳು, ದಾಸೋಹ ಮಾಡುವ ಶಕ್ತಿ ಇರದಿದ್ದರೂ ಅಂತಹ ಮನಸ್ಸಿತ್ತು. ಲಕ್ಕಮ್ಮತನ್ನ ಬಿಡುವಿನ ಸಮಯದಲ್ಲಿ ಹೊಲಗಳಲ್ಲಿ ಕಟಾವು ಮಾಡುವಾಗ, ಭತ್ತದರಾಶಿ ಮಾಡುವಾಗ ಸುತ್ತಮುತ್ತ ಹಾರಿಬಿದ್ದ ಕಾಳುಗಳನ್ನು ಆಯ್ದು ತಂದು ದಾಸೋಹ ಮಾಡುತ್ತಿದ್ದರು. ಆಗ ಆಹಾರದ ಒಂದೊಂದು ಅಗುಳಿಗೂ ಬೆಲೆಯಿತ್ತು. ಯಾವುದನ್ನೂ ವೃಥಾ ಹಾಳುಮಾಡುತ್ತಿರಲಿಲ್ಲ. ಅವರಿವರೆನ್ನದೆ ಹಸಿದವರಿಗೆ ಉಣಬಡಿಸುವುದು ಸಹಜವಾಗಿತ್ತು.           ನಮ್ಮ ಈಗಿನ ಪೀಳಿಗೆಯಲ್ಲಿ ಅನ್ನ ಹಾಗೂ ಹಣದ ಬೆಲೆಯೇ ತಿಳಿಯದಾಗಿದೆ. ಕೆಲವರಿಗೆ ಅದೇನು ಪ್ರತೀಷ್ಟೆಯೊ, ಊಟದ ತಟ್ಟೆಯಲ್ಲಿ ಸ್ವಲ್ಪ ಊಟವನ್ನೊ ಇಲ್ಲ ಕುಡಿಯಲು ಕೊಟ್ಟ ಪಾನೀಯವನ್ನೊ ಸ್ವಲ್ಪ ಸ್ವಲ್ಪ ಬಿಡುವ ಅಭ್ಯಾಸವಿರುತ್ತದೆ. ಅದನ್ನು ಬಳಸುವ ಹಾಗೂ ಇಲ್ಲ. ಒಲ್ಲದ ಮನಸ್ಸಿನಿಂದ ಆಚೆಗೆ ಸುರಿಯ ಬೇಕಾಗುತ್ತದೆ. ಮೊದಲಿನಂತೆ ಹಸುಗಳಿಗೆ ಮುಸುರೆ ನೀರೆಂದು ಕೊಂಡು ಹೋಗುವವರೂ ಇಲ್ಲವಾಗಿದ್ದಾರೆ.        ಮನೆಯಲ್ಲಿನ ಕಸದ ಬುಟ್ಟಿಗೆ ಹಾಕಿ, ಜಿರಲೆಗಳ ಸಂತತಿಗೆ ಪೌಷ್ಟಿಕ ಆಹಾರ ಉಣಬಡಿಸಿ, ಮನೆಯ ಸದಸ್ಯರು ನಾಲ್ವರಾದರೆ ಅವುಗಳ ಸಂಖ್ಯೆ ನಾನೂರಾಗಿ, ಅವನ್ನು ತಿನ್ನಲು ಹಲ್ಲಿಗಳೂ ಬಂದು ‘ ಮಕ್ಕಳಿರಲವ್ವ ಮನೆ ತುಂಬ’ ಎನ್ನುವ ನಾಣ್ನುಡಿ  ಬದಲಿಗೆ ‘ಜಿರಲೆ ಹಲ್ಲಿಗಳಿರಲವ್ವ ಮನೆ ತುಂಬ’ಎನ್ನಬೇಕಾಗುತ್ತದೆ.         ಅಷ್ಟೇ ಆದರೆ ಹೇಗೋ ಆದೀತೇನೋ! ಮಾರನೆಯ ಬೆಳಗಿನಲ್ಲಿ ಜೋರು ದ್ವನಿಯಲ್ಲಿ ‘ಕಸ’ ಎಂದು ಬೈದಾಡಿಕೊಂಡು, ಕೂಗಾಡಿಕೊಂಡು  ಮನೆಯ ಕಸ ತೆಗೆದುಕೊಂಡು ಹೋಗಲು ಬರುವ ನಮ್ಮ ಮಹಾ ನಗರ ಪಾಲಿಕೆಯ ಬಜಾರಿ ಸುಬ್ಬಮ್ಮನಿಗೆ (ಕ್ಷಮೆ ಇರಲಿ), ಹೆದರಿಕೊಂಡು ಮೆತ್ತಗೆ ಹೋಗಿ ಬೀದಿ ಬದಿಯಲ್ಲಿ ಕಸದ ಚೀಲವನ್ನು ಇಟ್ಟು  ಬಂದೆವೊ ಬಚಾವು. ಸುಬ್ಬಮ್ಮನ ಕಣ್ಣಿಗೆ ಬಿದ್ದು, ಅದು ನಮ್ಮದೇ ಕಸ ಎಂದು ಗೊತ್ತಾಯಿತೊ ಮರ್ಯಾದೆ ಬೀದಿಗೆ ಬಂತು ಎಂದ ಹಾಗೇ. ನಮ್ಮ ಸುಬ್ಬಮ್ಮ ಬೀದಿಯ ಎಲ್ಲಾ ಹೆಂಗಳೆಯರಿಗೂ ಗಟವಾಣಿ ಅತ್ತೆ ಇದ್ದಂತೆಯೇ! ಅವಳಂದಂತೆ ಅನ್ನಿಸಿಕೊಂಡು ,ಎದುರು ಮಾತೂ ಆಡದೆ, ಅಕ್ಕಪಕ್ಕದವರೇನಾದರೂನೋಡುತ್ತಿದ್ದಾರೊ, ಯಾರಾದರೂ ಕೇಳಿಸಿಕೊಂಡರೊ ಎಂದು ಕತ್ತು ಆಚೀಚೆ ತಿರುಗಿಸಿ ನೋಡಿ ಸರಸರನೆ ಮನೆಯೊಳಗೆ ಸೇರಿಕೊಳ್ಳಬೇಕು.            ಅನ್ನಂ ಪರಃ ಬ್ರಹ್ಮಂ ; ಎನ್ನುವ ಮಾತನ್ನು ಅರ್ಥೈಸಿಕೊಂಡು, ನಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ತಟ್ಟೆಯಲ್ಲಿ ಊಟ ಬಿಡಬಾರದು, ಬೇಕಾದ್ದನ್ನು,ಬೇಕಾದಷ್ಟು ಮಾತ್ರವೇ ತಟ್ಟೆಯಲ್ಲಿ ನೀಡಿಸಿಕೊಳ್ಳಬೇಕು ಎಂದು ತಿಳಿಹೇಳಬೇಕು. ಚಿಕ್ಕಂದಿನಲ್ಲೇ ರೂಢಿಸಿಕೊಂಡಲ್ಲಿ ಸ್ವಲ್ಪವಾದರೂ ಆಹಾರ ವ್ಯರ್ಥವಾಗುವುದನ್ನು ತಪ್ಪಿಸಬಹುದು. ಹನಿಹನಿಗೂಡಿದರೆ ಹಳ್ಳ, ತೆನೆತೆನೆಗೂಡಿದರೆ ಬಳ್ಳ ಎಂಬಂತೆ ಒಬ್ಬೊಬ್ಬರಿಂದಲೂ ಒಂದೊಂದು ತುತ್ತು ಆಹಾರ ಉಳಿದರೆ ಹೆಚ್ಚಲ್ಲದಿದ್ದರೂ ದಿನಕ್ಕೆ ಒಂದು ಮನೆಯಲ್ಲಿ ಒಂದು ಹಿಡಿ ಧಾನ್ಯ ಉಳಿಯುತ್ತದೆ.            ಹಾಗೇ ಉಳ್ಳವರು ಮಾತ್ರವಲ್ಲದೇ ಎಲ್ಲರೂ ತಮ್ಮಕೈಲಾದಷ್ಟು ಹಣ ದಾನಮಾಡಿ ಧರ್ಮಛತ್ರಗಳನ್ನು ಕಟ್ಟಬಹುದು, ಹಸಿದವರಿಗೆ ಎರಡು ತುತ್ತು ಅನ್ನ ನೀಡಬಹುದು. ಈ ಶತಮಾನದ ಮಹಾ ಮಾರಿ ಬಂದು ಎಷ್ಟೊ ಜನರಿಗೆ ಪಾಠ ಕಲಿಸಿದೆ. ‘ನಡೆದಾಡುವ ದೇವರಂ’ತವರೂ ನೂರಾರು ಜನರು ಹುಟ್ಟಿ ಬರಲಿ.           *********************************

“ಉಳ್ಳವರು ಶಿವಾಲಯವ ಮಾಡುವರು” Read Post »

ಕಥಾಗುಚ್ಛ

ಮಿಸ್ಟರ್ ಅನ್ ಫ್ರೆಂಡ್

ತೆಲುಗಿನಿಂದ ಅನುವಾದವಾದ ಕಥೆ ತೆಲುಗು ಮೂಲಃ ಶ್ರೀ ರಾಮದುರ್ಗಂ ಮಧುಸೂದನ ರಾವು                   ಕನ್ನಡಕ್ಕೆ: ಚಂದಕಚರ್ಲ ರಮೇಶ ಬಾಬು ಈಗೇನು ಮಾಡೋದು…..? ಗೇಟಿನಿಂದಲೇ ಹೊರಗೋಡಿಸಿದ್ದರೆ ಚೆನ್ನಾಗಿರೋದಾ….. ಈಗಂತೂ ಆ ಛಾನ್ಸ್ ಇಲ್ಲ. ಬಂದು ಕೂತಿದ್ದಾನೆ. ಬರೀ ಪರರ ಜೀವನಗಳಲ್ಲಿ ಇಣುಕಿ ನೋಡುವುದು ಬಿಟ್ಟರೆ ಇಷ್ಟು ವರ್ಷಗಳ ತನ್ನ ಜೀವನದಲ್ಲಿ ಮಾಡಿದ್ದು ಬೇರೇ ಏನಾದರೂ ಇದೆಯಾ ? ಎಲ್ಲಿ ಸಿಕ್ಕರೆ ಅಲ್ಲಿ…. ಯಾವಗ ಸಿಕ್ಕರೆ ಅವಾಗ…. ಹೇಗೆ ಸಿಕ್ಕರೆ ಹಾಗೆ ತೂರಿಬಿಡೋದೇ! ********** ಉಂಡಾಡಿ….. ಗಾಳಿ ಜೀವ…. ಶಿವಕುಮಾರನ ನೆನಪು ಬಂದಾಕ್ಷಣ ಮನಸ್ಸಿನಲ್ಲಿ ಹೊಳೆಯುವ ತಕ್ಷಣದ ಮಾತು ಆ ಎರಡೇ ! ನನಗಿನ್ನೂ ಚೆನ್ನಾಗಿ ನೆನಪಿದೆ. ಅವನನ್ನ ಜೀಜೆ ( ಗಾಳಿ ಜೀವ) ಎಂದು ಕರೆಯುತ್ತಿದ್ದೆವು. ನನ್ನ ಜೀವನದಲ್ಲಿ ಕನಸಿನಲ್ಲೂ ಸ್ವಾಗತಿಸದ ಮನುಷ್ಯ ಯಾರಾದರೂ ಇದ್ದಾರಾ ಎಂದರೆ ಅದು ಅವನೊಬ್ಬನೇ ! ಹಾಗಂತ ಇಬ್ಬರೂ ಗಟ್ಟಿಯಾಗಿ ಜಗಳ ಮಾಡಿಲ್ಲ. ಮಾತಾಡಿದ್ದು ಸಹ ತುಂಬಾ ಕಮ್ಮಿ !                                                           ********** ಶಾಲಾ ಜೀವನದ ಸಹಪಾಠಿ. ಯಾವಾಗಲೂ ಯಾವ ಗಿಡದ ಕೆಳಗೋ ಅಥವಾ ಆಟದ ಮೈದಾನದಲ್ಲೋ ಕಾಣಿಸಿಕೊಳ್ಳುತ್ತಿದ್ದ…. ತುಂಡಾದ ಗಾಳಿ ಪಟದ ಹಾಗೆ ! ನೋಡಿದಾಗಲೆಲ್ಲ ನಗುತ್ತಿದ್ದ….. ತನ್ನೆತ್ತರದ ನಿರ್ಲಕ್ಷ್ಯದಂತೆ ! ಧರಿಸುವ ದಿರಿಸಿನ ಮೇಲೆ ಗಮನ ಇರುತ್ತಿರಲಿಲ್ಲ. ಕಾಲಲ್ಲಿ ಚಪ್ಪಲಿ ಇಲ್ಲದೆ ತಿರುಗುತ್ತಿದ್ದ ಒಬ್ಬನೇ ವಿದ್ಯಾರ್ಥಿ ನಮ್ಮ ಶಾಲೆಯಲ್ಲಿ ಎಂದರೆ ಇವನೇ ! ಅಷ್ಟೇ ಅಲ್ಲ. ನನ್ನ ಸ್ವಾಭಿಮಾನಕ್ಕೆ ಮೊದಲಸಲ ಧಕ್ಕೆ ತಂದವನೂ ಇವನೇ. ಸದಾ ಕ್ಲಾಸಿನಲ್ಲಿ ನಾನೇ ಮೊದಲಿಗನಾಗುವಂತೆ ನೋಡಿಕೊಳ್ಳುತ್ತಿದ್ದೆ. ಟೆನ್ತ್ ಕ್ಲಾಸಿನ ಅರ್ಧ ವಾರ್ಷಿಕ ಪರೀಕ್ಷೆಯಲ್ಲಿ ಶಿವ ಲೆಕ್ಕದಲ್ಲಿ ಮೊದಲಿಗನಾಗಿದ್ದ. ಆ ದಿನಗಳಲ್ಲಿ ಅದೊಂದು ಸೆನ್ಸೇಷನ್ ! ಹಿಂದಿನ ಬೆಂಚಿನಲ್ಲಿ ಇದ್ದಾನಾ ಇಲ್ಲವಾ ಎನ್ನುವಷ್ಟು ಸೈಲೆಂಟಾಗಿ ಇರುವ ಹುಡುಗ ಇದ್ದಕ್ಕಿದ್ದಂತೆ ಎಲ್ಲರ ಕಣ್ಣಿಗೆ ಬಿದ್ದ. ’ ಎಷ್ಟು ಸೈಲೆಂಟಾಗಿರ್ತೀಯಲ್ಲ… ಅಷ್ಟು ಮಾರ್ಕ್ ಹೇಗೆ ತೆಗೆದೆ ಮಾರಾಯಾ ’ ಅಂತ ಕೇಳಿದರೆ… ’ ಓದಿದ್ದೇ ಬಂದರೆ ಯಾರಾದರೂ ತೆಗೀತಾರೆ. ಇದರಲ್ಲೇನಿದೆ ’ ಅಂತ ಕಾಜುವಲ್ಲಾಗಿ ಉತ್ತರ ಕೊಟ್ಟಿದ್ದ. ಆದರೆ ಸೋಜಿಗದ ಸಂಗತಿ ಎಂದರೆ ಮತ್ತೆ ಯಾವಾಗಲೂ ಅವನು ಅಷ್ಟು ಮಾರ್ಕು ತೆಗಿಯಲಿಲ್ಲ. ಬರೀ ಬೇಕಾಗುವಷ್ಟು ಮಾರ್ಕುಗಳಿಂದಲೇ ಟೆನ್ತ್ ಪಾಸಾದ. ಆಗಲೇ ಅವನ ತಂದೆ ತೀರಿಹೋದರು. ಮನೆ ನಡೆಯೋದೇ ಕಷ್ಟವಾಯಿತು. ಸರಿಯಾಗಿ ಆರು ತಿಂಗಳ ನಂತರ….. ಬೀದಿ ಕೊನೆಯ ಶಿವಾಲಯದಲ್ಲಿ ಪೂಜಾರಿಯಾಗಿ ಕಾಣಿಸಿಕೊಂಡ. ಅಲ್ಲಿಯವರೆಗೆ ಮಾತ್ರ ನನಗೆ ನೆನಪು. ಮತ್ತೆ ನಾನು ಆ ಊರು ಬಿಟ್ಟಿದ್ದೆ… ಅಲ್ಲಿಯ ನೆನಪುಗಳನ್ನು ಸಹ. ****** ಇದೆಲ್ಲ ನಲವತ್ತು ವರ್ಷಗಳ ಕೆಳಗಿನ ಮಾತು ! ಇವತ್ತು ಮತ್ತೆ ನೆನಪಿಗೆ ತಂದುಕೊಳ್ಳಬೇಕಾಗಿದೆ. ಎಲ್ಲಿಯ ಕರ್ನೂಲು ಎಲ್ಲಿಯ ಕೆನಡಾ. ತಾನು ಇಲ್ಲಿಗೆ ಹೇಗೆ ಬಂದದ್ದು ?… ತಾನು ಇಲ್ಲಿರುವುದು ಮೂರನೆಯ ಕಣ್ಣಿಗೆ ಗೊತ್ತಿರಲಿಲ್ಲ…. ಅಂಥಾದ್ರಲ್ಲಿ ಇವನಿಗೆ ಹೇಗೆ ಗೊತ್ತಾಯಿತು ? ರಿಷಿಗೆ ಸಿಟ್ಟು ಉಕ್ಕುಕ್ಕಿ ಬರುತ್ತಿತ್ತು …. ತನ್ನ ಮೇಲೆ…. ತನ್ನ ಬದುಕಿನ ಮೇಲೆ…. ಶಿವನ ಮೇಲೆ….. ಮಾತಾಡಿಸಲೇ ಬೇಕಾಗಿ ಬಂದ ಈ ಸಂದರ್ಭದ ಮೇಲೆ. ….. ಈಗೇನು ಮಾಡೋದು? ಮತ್ತೆ ಪ್ರಶ್ನೆ ಮೊದಲಿಗೇ ಬಂತು. ತಲೆ ಕೊಡವಿ ಎದ್ದ ಅನಿವಾರ್ಯವೆನ್ನುವಂತೆ. ******* ಐದೇ ನಿಮಿಷದ ಆತಿಥ್ಯ. ಅದೂ ಎಷ್ಟು ಬೇಕೋ ಅಷ್ಟು. “ ಹಾಯ್ ! ಹೇಗಿದ್ದಿಯಾ ?…. ಸಾರೀ ಹೇಗಿದ್ದೀರಿ? “ ರಿಷಿಯನ್ನು ನೋಡಿದ ಶಿವ ವಿಶ್ ಮಾಡಿದ. “ ಫರ್ವಾ ಇಲ್ಲ. ನೀನು ಹೇಗಿದ್ದೀಯಾ ?” ತುಟಿಯ ಮೇಲೆ ಬಲವಂತದ ನಗೆಯನ್ನು ಬಳೆದುಕೊಂಡ ರಿಷಿ. “ ಓ ಸೂಪರ್ ! ಎರಡು ವಾರದ ಹಿಂದೆ ಕೆನಡಾಗೆ ಬಂದೆ. ನನ್ನ ಅಣ್ಣನ ಮಗ ಇಲ್ಲಿ ಡಾಕ್ಟರ್. ಅವನೇ ತುಂಬಾ ಒತ್ತಾಯ ಮಾಡಿ ಎಳ್ಕೊಂಡು ಬಂದ… ಕೆನಡಾ ತೋರಿಸ್ತೇನೆ ಅಂತ.” ಶಿವ ತಮಾಷೆಯಾಗಿ ನಗುತ್ತಾ ಮಾತಾಡ್ತಿದ್ದರೆ ರಿಷಿ ನಿರ್ವಿಕಾರವಾಗಿ ನೋಡುತ್ತಿದ್ದ. ಅದೇ ನಗು.. ನಲವತ್ತು ವರ್ಷ ಕಳೆದರೂ ಮಾಸಿಲ್ಲ. ಅವನಲ್ಲಿ ನಗು ಹೇಗೆ ಹುಟ್ಟುತ್ತೋ ರಿಷಿಗೆ ಅರ್ಥವಾಗದ ವಿಷಯ. ತಾನು ದಿನಾಲೂ ಐದಾರು ಮೀಟಿಂಗ್ ಅಟೆಂಡ್ ಮಾಡ್ತಾನೆ. ಕಂಪೆನಿಗಳಿಗೆ ಸಂಬಂಧ ಪಟ್ಟ ಸೀರಿಯಸ್ ನಿರ್ಣಯಗಳನ್ನು… ನಿರ್ದಾಕ್ಷಿಣ್ಯ ನಿರ್ಣಯಗಳನ್ನು.. ಹೀಗೆ ಚಿಟಿಕೆ ಹೊಡೆಯೋದರಲ್ಲಿ ತೊಗೊಳ್ಳಬಲ್ಲ. ಆದರೆ ಈ ತರದ ನಗೆಗಾಗಿ ಎಂದೂ ಪ್ರಯತ್ನಿಸಿಲ್ಲ. ತನ್ನ ಪರ್ಸನಲ್ ಟ್ರೈನರ್ ನ ದೂರು ಇದೇ ! “ ಸರ್! ನೀವೆಲ್ಲ ಓಕೇ. ಆದರೆ ನಿಮ್ಮಲ್ಲಿ ಸ್ಮೈಲ್ ಈಸ್ ಮಿಸ್ಸಿಂಗ್ ! “ ಅಂತ. ಶಿವನ್ನ ನೋಡಿದಾಗ ಮತ್ತೆ ಆ ಮಾತುಗಳು ನೆನಪಿಗೆ ಬಂದವು. “ ಡಾಕ್ಟರಾ….” “ ಹೌದು. ಗೌರೀಪತಿ ವೇದುಲ….. ಆನ್ಕಾಲಜಿಸ್ಟ್. ಅವನ ಹೆಂಡತಿ ಹಾರಿಕಾ, ರೇಡಿಯಾಲಜಿಸ್ಟ್. “ ರಿಷಿ ತಲೆ ಅಲ್ಲಾಡಿಸಿದ. ಏನೂ ಮಾತಾಡಲಿಲ್ಲ. ಕಣ್ಣ ಹಿಂದೆ ಒಂದು ನೆರಳು ಹಾದು ಮರೆಯಾಯ್ತು. “ ನೀನು ಇಲ್ಲಿದ್ದೀಯಾ ಅಂತ ಗೊತ್ತಾಯ್ತು. ಕರ್ನೂಲಿನ ದೋಸ್ತನನ್ನು ಕೆನಡಾದಲ್ಲಿ ಭೇಟಿ ಮಾಡೋದು…. ಭಾರೀ ಗಮ್ಮತ್ತಾಗಿದೆ ಅಲ್ಲಾ …” ರಿಷಿ ಮುಜುಗರದಿಂದ ಮಿಸುಕಾಡಿದ. “ ಶಿವ…. ಸಾರೀ. ನನಗೆ ಪ್ರಿ ಫಿಕ್ಸ್ಡ್ ಷೆಡ್ಯೂಲ್ ಇದೆ… ಮತ್ತೆ ಸಿಗೋಣ… “ “ ಓ ಹೌದಾ… ಇಟ್ಸ್ ಒಕೆ.. ಖಂಡಿತಾ ಸಿಗೋಣ. “ “ ಹೇಗೆ ಹೋಗ್ತಿಯಾ ….ಇರು. ನನ್ನ ಡ್ರೈವರ್ ಡ್ರಾಪ್ ಮಾಡ್ತಾನೆ “ ಫೋನ್ ಮಾಡಲು ಹೋದ ರಿಷಿಯನ್ನು ಶಿವ ತಡೆದ. “ ಬೇಡ… ಬೇಡ. ಡಾಕ್ಟರ್ ನ ಕಾರಿದೆ. ಅವರಿಬ್ಬರೂ ಬರೋದ್ರಲ್ಲಿ ರಾತ್ರಿಯಾಗತ್ತೆ. ನಾನು ಸ್ವಲ್ಪ ಹಾಗೆ ಒಂದು ಸುತ್ತು ಹಾಕಿ ಮನೆ ಸೇರ್ತೀನಿ…..” ಬಾಗಿಲ ವರೆಗೆ ಹೋದ ಶಿವ ಹಿಂದಿರುಗಿದ. “ ರಿಷಿ! ಎಲ್ಲಾ ಸರಿಯಾಗಿದೆಯಾ.. “ ಒಂದು ಕ್ಷಣ ಕಾಲ ನಿಶ್ಶಬ್ದ… “ ಯಾ… ಯಾಕೆ ಹಾಗೆ ಕೇಳ್ತಿದ್ದಿ ?” ತಡವರಿಸುತ್ತಾ ಕೇಳಿದ ರಿಷಿ. “ಏನಿಲ್ಲ. ಜಸ್ಟ್ ಕೇಳಬೇಕೆನಿಸಿತು. ಇಂಡಿಯಾಗೆ ವಾಪಸ್ ಹೊಗೋದರಲ್ಲಿ ಮತ್ತೆ ಸಿಗ್ತೀನಿ.” ಶಿವ ಹೋದಮೇಲೆ ಸೋಫಾದ ಮೇಲೆ ಕುಸಿದ ನಿತ್ರಾಣವಾಗಿ. ************ ರಿಷಿ ತನ್ನ ಜೀವನದಲ್ಲಿ ಯಾವುದುಕ್ಕಾಗಿಯೂ ನಿಲ್ಲಲಿಲ್ಲ. ಧಾವಂತದಲ್ಲೇ ಐದು ದಶಕ ದಾಟಿದ್ದ. ಕೆಲಸಕ್ಕೆ ಸೇರಿದ್ದರಿಂದ ಹಿಡಿದು…. ನೂರಾರು ಜನಕ್ಕೆ ಕೆಲಸ ಕೊಡುವ ಹುದ್ದೆಗೆ ತುಂಬಾ ಸುಲಭವಾಗಿ ಸೇರಿದ್ದ. ಈ ಪಯಣದಲ್ಲಿ ಕಷ್ಟಗಳು ಇರಲಿಲ್ಲವೆಂತಲ್ಲ, ಬೇಕಾದಷ್ಟು.. ಅದರೆ ಅವುಗಳನ್ನು ಲೆಕ್ಕ ಮಾಡದಷ್ಟು ನಿರ್ಲಕ್ಷ್ಯ ಅಭ್ಯಾಸ ಮಾಡಿಕೊಂಡಿದ್ದ.  ಗುರಿ ಮುಟ್ಟ ಬೇಕಾದರೆ…. ಮುಟ್ಟುವ ವರೆಗೆ ಪ್ರಯತ್ನಿಸುವುದೇ … ಎನ್ನುವ ಸೂತ್ರವನ್ನು ನಂಬಿದ್ದ… ಮತ್ತೆ ಆಚರಿಸಿದ್ದ. ನಲವತ್ತರ ವಯಸ್ಸಿಗೆ ಉದ್ದಿಮೆದಾರ. ರಿಷಿ ಸೊಲ್ಯೂಷನ್ಸ್ ಅಂತ ಶುರುವಾಗಿ ಈಗ ರಿಷಿ ಗ್ರೂಪ್ ಆಫ್ ಇಂಡಸ್ಟ್ರೀಸ್ ವರೆಗೆ ಬೆಳೆಸಿದ್ದ. ಮಗಳಿಗೆ ಮದುವೆ ಮಾಡಿ ಅಳಿಯನಿಗೆ ಕಂಪೆನಿಯಲ್ಲಿ ಹೊಣೆಗಾರನನ್ನಾಗಿ ಮಾಡಿದ. ಮಗ ಎಂಡಿ ಯಾಗಿದ್ದು ಗ್ರೂಪಿನ ವ್ಯವಹಾರಗಳನ್ನೆಲ್ಲ ನೋಡಿಕೊಳ್ಳುತ್ತಿದ್ದ. ಆದರೆ ಜೀವನದಲ್ಲಿ ಮೊದಲನೆಯ ಸಲ ಬಹು ಆಶ್ಚರ್ಯವಾಗಿ ಸ್ವಲ್ಪ ನಿಲ್ಲಬೇಕಾಗಿ ಬಂತು. ಆರಾಮದ ಸಲುವಾಗಿ ಕೆನಡಾಗೆ ಬಂದಿದ್ದ. ರಿಷಿಗೆ ಕೆನಡಾ ಫೇವರೆಟ್ ಪ್ಲೇಸ್. ತನ್ನ ಹೆಂಡತಿ ಮಹಿತಾ ತೀರಿಕೊಂಡ ಮೇಲೆ ಪೇರಿಕೊಂಡ ಒಬ್ಬಂಟಿತನವನ್ನು ಹೋಗಲಾಡಿಸಲು ಪ್ರತಿ ವರ್ಷವೂ ಇಲ್ಲಿಗೆ ಬರುತ್ತಿದ್ದ. ರಿಷಿಗೆ ಮೊದಲಿನಿಂದಲು ಯಾವ ವಿಷಯವನ್ನಾದರೂ ಗೋಪ್ಯವಾಗಿ ಇಡುವುದು ಅಭ್ಯಾಸ. ಅದೂ ಕಂಪೆನಿಯ ವಿಷಯವೆಂದರೆ ಇನ್ನೂ ಸರಿ.. ತೀರ ಕಠಿಣವಾಗಿರುತ್ತಿದ್ದ. ತಾನು ಕೆನಡಾಗೆ ಬಂದಿರುವ ವಿಷಯ ಯಾರಿಗೂ ಗೊತ್ತಾಗಂತೆ ನೋಡಿಕೊಂಡಿದ್ದ. ಎಲ್ಲ ಪಕ್ಕಾ ಪ್ಲಾನ್ ಮಾಡಿಯೇ ತನ್ನ ಟೂರ್ ಕನ್ಪರ್ಮ್ ಮಾಡಿಕೊಂಡಿದ್ದ. ಬಂದು ಒಂದು ತಿಂಗಳಾಗಿದ್ದರು ತಾನು ಇಲ್ಲಿ ಇರುವುದು ಯಾರಿಗೂ ಗೊತ್ತಾಗದ ಹಾಗೆ ತನ್ನ ಪರ್ಸನಲ್ ಸ್ಟಾಫ್ ನೋಡಿಕೊಳ್ಳುತ್ತಿದ್ದರು. ಇಷ್ಟೆಲ್ಲಾ ಆದರೂ, ಶಿವ ಅದು ಹೇಗೆ ಕಂಡು ಹಿಡಿದ? ಸ್ವಲ್ಪ ಹೊತ್ತಿಗೆ ಏನೋ ಹೊಳೆಯಿತು. ಅವನಿಗೆ ವಿಷಯ ಹೇಗೆ ತಿಳಿಯಿತೋ ಅರ್ಥವಾಯಿತು. ********** “ ಹಾಯ್ ಸರ್……ಹೇಗಿದ್ದೀರಿ? “ ಎನ್ನುತ್ತ ಗೌರೀಪತಿ ನಗುತ್ತ ಒಳಬಂದ. “ ಯಾ ಫರ್ವಾ ಇಲ್ಲ….” ಧ್ವನಿ ಬಾವಿಯೊಳಗಿಂದ ಬಂದಂತೆ ನೀರಸವಾಗಿತ್ತು. “ ಒನ್ ಮಿನಿಟ್…. “ ಎನ್ನುತ್ತ ಪಲ್ಸ್, ಬಿಪಿ ಚೆಕ್ ಮಾಡಿದ. “ ಹಾ.. ಒಕೆ. ಹೇಳಿ. ತುಂಬಾ ನಿತ್ರಾಣ ಎನಿಸುತ್ತಿದೆಯೇ …” ’ ಹೌದು. ತುಂಬಾನೇ….ಒಮ್ಮೊಮ್ಮೆ ಏಳಲಿಕ್ಕೆ ಸಹ ಬರದ ಹಾಗೆ….” “ ವೆಲ್… “ ಯಾರಿಗೋ ಕಾಲ್ ಮಾಡಿದ. “ ಸರ್. ಇವತ್ತಿನಿಂದ ನಿಮಗೆ ಪರ್ಸನಲ್ ಡೈಟಿಷಿಯನ್ ಬರ್ತಾರೆ. ಷಿ ಈಜ್ ಬೃಂದಾ ಫ್ರಂ ಅವರ್ ಹಾಸ್ಪಿಟಲ್. ನಿಮ್ಮ ಆಹಾರದ ವಿಷಯ ಎಲ್ಲಾ ಪೂರ್ತಿಯಾಗಿ ತಾನೇ ನೋಡಿಕೊಳ್ತಾಳೆ. ಮೆಡಿಸಿನ್ ಕಂಟಿನ್ಯೂ ಮಾಡಿ. ಹೋಪ್ ಎವ್ರೀ ಥಿಂಗ್ ಗುಡ್..” . ಎದ್ದ. “ ಅಂದಹಾಗೆ ಚಿಕ್ಕಪ್ಪ ನಿಮ್ಮನ್ನ ಕೇಳಿದೆನೆಂದು ಹೇಳಲು ಹೇಳಿದ್ದಾರೆ. ಅವರು ನಿಮಗೆ ಕಾಲ್ ಮಾಡ್ತಾರಲ್ಲಾ..” “ ಯಾ.. ಜಿಡ್ಡು ಕೃಷ್ನಮೂರ್ತಿಯವರ ಪ್ರವಚನ ಕಳಿಸ್ತಾನೆ..” “ ಎಕ್ಸಲೆಂಟ್ ರಿಷಿಯವರೇ ! ಚಿಕ್ಕಪ್ಪ ನಂಥವರು ಒಬ್ಬರಿದ್ದರೆ ಸಾಕು ಎಷ್ಟು ಕಷ್ಟ ಬಂದರೂ ತಡೆದು ಕೊಳ್ಳಬಹುದು. ತುಂಬ ಕೂಲ್ ಪರ್ಸನಾಲಿಟಿ…. “ ಗೌರೀಪತಿಹೊರಟಿರಲು…“ ಡಾಕ್ಟರ್… ನಾನು ಇದರಿಂದ ಹೊರಬೀಳುತ್ತೀನಾ…. “ ರಿಷಿ ಅನೂಹ್ಯವಾಗಿ ಪ್ರಶ್ನಿಸಿದ. ಗೌರೀಪತಿಯ ಮುಖದಲ್ಲಿಯ ಬಣ್ಣಗಳು ಬದಲಾದವು. ಮತ್ತೆ ತಕ್ಷಣ ಸರಿಪಡಿಸಿಕೊಂಡ. “ ವೈನಾಟ್…ನಿಮ್ಮಲ್ಲಿ ಇಂಪ್ರೂವ್ ಮೆಂಟ್ ಕಾಣ್ತಿದೆ… ಡೋಂಟ್ ವರ್ರಿ ಸರ್. ನಾವಿದ್ದೀವಲ್ಲ “ ರಿಷಿಯ ಮುಖದಲ್ಲಿ ಒಂದು ನಿರ್ಲಿಪ್ತ ನಗೆ. “…. ಅದಕ್ಕೆ ನನಗೆ ಡಾಕ್ಟರ್ ಗಳೆಂದರೆ ಇಷ್ಟ. ಪ್ರಾಣಾನೇ ಹೊಗ್ತಾ ಇದ್ರೂ ಸರಿ… ನಿಮಗೇನೂ ಆಗಲ್ಲ ಅಂತ ಧೈರ್ಯಕೊಡ್ತಿರ್ತಾರೆ. “ “ ರಿಷಿಜೀ. ಈ ಸಮಯದಲ್ಲಿ ನೀವು ತುಂಬಾ ಯೋಚನೆ ಮಾಡಬೇಡಿ. ಜಸ್ಟ್ ಲಿವ್ ದಿಸ್ ಮೊಮೆಂಟ್. ದಟ್ಸಾಲ್. ಇಷ್ಟೆಲ್ಲ ಜೀವನಾನ್ನ ನೋಡಿದೀರಿ. ನಿಮಗೆ ಗೊತ್ತಿರದ ಫಿಲಾಸಫಿ ಏನಿರತ್ತೆ ಹೇಳಿ? ಆದ್ರೂ ನಿಮಗೇ ಗೊತ್ತಿದ್ದ ಹಾಗೆ…. ಎವೆರಿಬಡಿ ಷುಡ್ ಎಗ್ಜಿಟ್…. ಟುಡೇ ಆರ್ ಟುಮಾರೋ….. ರೈಟ್. ಹಾಗಾದ್ರೆ ನಾನು ಬರ್ಲಾ. ಟೇಕ್ ಕೇರ್. “ ಗೌರೀಪತಿ ಹೊರಟು ಹೋದ. ಒಂದಷ್ಟು ವಿಶ್ವಾಸ ಮತ್ತೊಂದಷ್ಟು ನಂಬಿಕೆಯನ್ನು ಬಿತ್ತುತ್ತಾ.. *************** ಪರಿಸ್ಥಿತಿಗಳು ಬದಲಾಗುವುದಕ್ಕೆ ವರ್ಷಗಳು ಬೇಕಾಗಿಲ್ಲ. ಕೆಲ ದಿನ, ಗಂಟೆಗಳು, ನಿಮಿಷಗಳು ಸಾಕು. ರಿಷಿಗೆ ಇತ್ತೀಚೆಗೆ ಇದು ಅನುಭವಕ್ಕೆ ಬರುತ್ತಿತ್ತು. ಸಮಯ ತುಂಬಾ ಭಾರವಾಗಿ ಸಾಗುತ್ತಿತ್ತು. ರೂಮ್ ಬಿಟ್ಟು ಹೊರಗೆ ಹೋಗಿ ಅದೆಷ್ಟು ದಿನವಾಗಿತ್ತೋ ? ಸದಾ ಲ್ಯಾಪ್ ಟಾಪಿನಲ್ಲಿ ಬ್ಯುಸಿಯಾಗಿರುತ್ತಿರುವ ರಿಷಿಯ ಕೈಯಲ್ಲಿ ಜಿಡ್ಡು ಕೃಷ್ಣಮೂರ್ತಿಯವರ ಪುಸ್ತಕ ಕಾಣುತ್ತಿದೆ. ಯಾರೂ ತನ್ನನ್ನು ಡಿಸ್ಟರ್ಬ್ ಮಾಡದಂತೆ ಏಕಾಂತ ಸೃಷ್ಟಿಸಿಕೊಂಡ ರಿಷಿ ಸದ್ಯ ಒಬ್ಬಂಟಿ ತನದಿಂದ ಒದ್ದಾಡುತ್ತಿದ್ದ. ಇಷ್ಟೂ ದಿನ ತನ್ನನ್ನು ಹಿಡಿದು ನಿಲ್ಲಿಸಿದ ಆತ್ಮ ನಿರ್ಭರತೆ ಮೆಲ್ಲಗೆ ಕರಗುತ್ತಿತ್ತು. ಯಾಕೋ ಪಯಣ ಮುಗಿಯುತ್ತದೆ ಎನ್ನುವ ಫೀಲಿಂಗ್. ಸಣ್ಣ ಸಣ್ಣ ವಿಷಯಗಳಿಗೇ ತುಂಬಾ ಎಮೋಷನಲ್ ಆಗ್ತಿದ್ದ.. ಕಣ್ಣು ತೇವವಾಗದ ದಿನಗಳೇ ಇಲ್ಲಾಂತ ಆಗಿತ್ತು. ಆ ಗಟ್ಟಿತನ… ಮೊಂಡುತನ…. ಪಾದರಸವನ್ನು ಮೀರಿಸುವ ಚುರುಕು ಮೇಧಾಶಕ್ತಿ ಎಲ್ಲಾ ಏನಾಗಿವೆ ? ಏನೋ! ಶಿವ ಆಗಾಗ ಫೋನ್ ಮಾಡಿ ಮಾತಾಡುತ್ತಿದ್ದ. ಶುರುವಿನಲ್ಲಿ

ಮಿಸ್ಟರ್ ಅನ್ ಫ್ರೆಂಡ್ Read Post »

ಕಥಾಗುಚ್ಛ

ಪಾರಿವಾಳ ರಾಣಿ

ಕಥೆ ಪಾರಿವಾಳ ರಾಣಿ ಹರೀಶ್ ಗೌಡ ಒಂದು ಪ್ರೇಮ ಕಥೆ ಕ್ರಿ ಶ ಮತ್ತು ಕ್ರಿ ಪೂ ದಲ್ಲಿ ಹಿಂದೆ ಜಗತ್ತು ಹೇಗಿತ್ತು? ಸ್ವಚ್ಚಂದ ಜಗತ್ತು ಪ್ರಕೃತಿಯ ಮಡಿಲಿನಲ್ಲಿ ಸರ್ವರು ಸಮಾನರೆಂಬ ಭಾವನೆ ಇದ್ದಂತ ಕಾಲ. ಮತ್ತು ಜಾತಿ ವರ್ಣ ಇದರ ತಕರಾರು ಇಂದಿನದಲ್ಲ ಹಿಂದಿನಿಂದಲೂ ಇದೆ ಅದೆಲ್ಲ ಬಿಡಿ ನಮ್ಮ ಕಥೆ ಶುರು ಮಾಡೊಣ ಓದೊಕೆ ನೀವ್ ರೇಡಿ ಅಲ್ವ ಮತ್ತೆ ಬನ್ನಿ ಯಾಕ್ ತಡ. ಸುತ್ತಲೂ ಬೆಟ್ಟ ಗುಡ್ಡಗಳು ಕಾಡು ನದಿಗಳ ಮಧ್ಯೆ ನೂರಾರು ಹಳ್ಳಿ ಸೇರಿದ ದೀನದತ್ತ ಎಂಬ ಮಹಾನ್ ಸಾಮ್ರಾಜ್ಯ ಸಕಲವೂ ಸರ್ವವೂ ಸಕಾಲಕ್ಕೆ ಸಿಗುವ ರಾಜ್ಯ ಅದು. ಅಲ್ಲಿ ದೀನದತ್ತ ಅರಳಿ ಮಹಾರಾಜ ಎಂಬ ದೊರೆ ಆಳುತ್ತಿದ್ದ ಮೊದಲ ಹೆಂಡತಿ ಮದುವೆಯ ಹೊಸದರಲ್ಲಿ ಅಕಾಲಿಕ ಮರಣದಿಂದ ರಾಜ ಎರಡನೆ ಮದುವೆ ಆದ ನಂತರ ಬಹುಕಾಲ ಕಾದರು ಮಕ್ಕಳಾಗಲಿಲ್ಲ ನಂತರ ಮೂರನೆಯ ಮದುವೆಯ ತೀರ್ಮಾನ ಮಾಡಿದ ಪಕ್ಕದ ರಾಜ್ಯದ ರಾಜಕುಮಾರಿ ಸುಗಂದಿಯನ್ನ ಅಪಹರಿಸಿ ಮದುವೆ ಆದ ಮಹಾನ್ ಪರಾಕ್ರಮಿಯಾಗಿದ್ದ ಅರಳಿರಾಜನನ್ನ ಸೋಲಿಸುವುದು ಅಷ್ಟು ಸುಲಭದ ಮಾತಲ್ಲ ಇದನ್ನು ತಿಳಿದಿದ್ದ ಪಕ್ಕದ ರಾಜ ತನ್ನ ಮಗಳ ಅಪಹರಣವನ್ನ ವಿರೋದಿಸದೆ ಚಾಣಕ್ಷತನದಿಂದ ಬಂಧವನ್ನ ಬೆಳಿಸಿದ ವರ್ಷ ತುಂಬುವುದರೊಳಗೆ ದೀನದತ್ತ ಸಾಮ್ರಾಜ್ಯದಲ್ಲಿ ಒಂದು ಕಳೆ ಬಂದಂತ್ತಾಗಿತ್ತು ಮಹಾರಾಣಿ ಸುಗಂದಿ ಗರ್ಭವತಿಯಾದ ಸುದ್ದಿ ನಗರದೆಲ್ಲೆಡೆ ಹಬ್ಬಿತ್ತು. ಮಹಾರಾಜ ಅರಳಿರಾಜನಿಗಂತು ಬಹುಕಾಲದ ಕನಸು ನೆರವೇರುವ ಕಾಲ ಕಣ್ಮುಂದೆ ಬಂದು ನಿಂತಂತೆ ಭಾಸವಾಗುತ್ತಿತ್ತು. ನವಮಾಸ ತುಂಬಿ ಪ್ರಸವದ ದಿನ ಬಂದೆ ಬಿಟ್ತು ಇಡಿ ರಾಜ್ಯದಲ್ಲಿ ಕೂತುಹಲ ಆತಂಕ ಅಹಮನೆಯ ತುಂಬ ವೈದಿಕ ಮಂದಿಗಳು ಸೂಲಗಿತ್ತಿಯರು ಮಹಾರಾಣಿಯ ಹೆರಿಗೆಯ ಜವಬ್ದಾರಿ ವಹಿಸಿಕೊಂಡಿದ್ದರೂ. ಸಕಲ ದೇವಾಲಯಗಳಲ್ಲಿ ಪೂಜಾ ಕೈಂಕರ್ಯಗಳು ನೆರವೇರತೊಡಗಿದವು. ಮಹಾರಾಜನಿಗೊಂದು ವರದಿ ತಲುಪಿತ್ತು ಗರ್ಭದಲ್ಲಿ ಮಗು ಅಡ್ಡಲಾಗಿದೆ ಹೆರಿಗೆ ಕಷ್ಠವಾಗುತ್ತಿದೆ ಎಂಬುದು. ಸುದ್ದಿ ಕೇಳಿ ಅರಳಿರಾಜನಿಗೆ ಭಯ ಮತ್ತು ಆತಂಕ ಕಳೆಗಟ್ಟಿತ್ತು. ಸಮಯಕಳೆದಂತೆ ಕೊಠಡಿಯ ಒಳಗಿಂದ ಮಗು ಅಳುವ ನಾದ ಕೇಳಿದೊಡನೆ ರಾಜನ ಮನದಲ್ಲಿ ಆನಂದ ಇಡೀ ರಾಜ್ಯವೇ ಕುಣಿದು ಕುಪ್ಪಳಿಸಿತ್ತು ರಾಜ ಬಲು ಆನಂದದಿಂದ ರಾಣಿಯ ಬಳಿ ಓಡಿ ಬಂದು ನೋಡ್ತಾನೆ ಮಗು ಕೈಕಾಲು ಆಡಿಸುತ್ತಾ ಮಲಗಿಸಿದ್ದಾರೆ ಸೂಲಗಿತ್ತಿಯರು ಮಹಾರಾಜ ನಿಮಗೆ ಹೆಣ್ಣುಮಗು ಜನನವಾಗಿದೆ ರಾಜನಿಗೆ ಬಹುಕಾಲ ಮಕ್ಕಳಿಲ್ಲದ ನೋವಿನಲ್ಲಿದ್ದವನಿಗೆ ಗಂಡು ಮಗುವಾದರೇನು ಹೆಣ್ಣಾದರೇನು ಒಟ್ಟಿನಲ್ಲಿ ಆನಂದವಾಗಿತ್ತು ಜೊತೆಗೆ ಮತ್ತೊಂದು ಸುದ್ದಿ ಹೃದಯ ಚೂರು ಮಾಡಿತ್ತು ಪ್ರಸವದ ಸಮದಲ್ಲಿ ಆದ ಅತಿಯಾದ ವೇದನೆ ಮತ್ತು ಅಧಿಕ ರಕ್ತಸ್ರಾವದಿಂದ ಮಹಾರಾಣಿ ಸುಂಗಧಿ ಇಹಲೋಕ ತೊರೆದಿದ್ದಳು. ಅಕ್ಷರಃಸಹಾ ರಾಜ ಕುಸಿದು ಹೋಗಿದ್ದ ಆಸೆಯಂತೆ ಮಗು ದೊರೆತ್ತಿತ್ತು ಆದರೆ ಮಡದಿ ದೂರವಾಗಿದ್ದಳು ನೋವಿನ ನಡುವೆ ರಾಜನ ಮುಂದಿನ ದಾರಿ ಎರಡನೇ ಹೆಂಡತಿಯ ಆಶ್ರಯದಲ್ಲಿ ಈ ಮಗಳನ್ನ ಬೆಳೆಸಬೇಕಾಗಿತ್ತು. ಮಲತಾಯಿಯಾದರೂ ಮಕ್ಕಳಿಲ್ಲದೆ ಬಂಜೆಯಾಗಿದ್ದ ಮಹಾರಾಜನ ಎರಡನೇ ಹೆಂಡತಿ ಆ ಮುದ್ದು ಮಗಳನ್ನ ಸಾಕಿ ಬೆಳೆಸಿ ತಾಯಿಯ ಸ್ಥಾನ ತುಂಬಿದಳು ಮಗಳು ಸುಂದರಳೂ ದೃಢಕಾಯಳೂ ಆಗಿ ಬೆಳೆಯತೊಡಗಿದಳು. ತನ್ನ ಮಗಳಿಗೆ ಯಾವ ಕುಂದು ಕೊರತೆಗಳು ಬರದಂತೆ ಅರಳಿ ಮಹಾರಾಜ ಸರ್ವವೂ ಅರಮನೆಯಲ್ಲಿ ಮಗಳಿಗೆ ಸಿಗುವಂತೆ ಆದೇಶ ಹೊರಡಿಸಿದ. ಆಡುವ ಆಟಿಕೆ ಇಂದ ಹಿಡಿದು ಗೆಳತಿಯರು ಶಿಕ್ಷಣವೂ ಎಲ್ಲ ಅರಮನೆಯಲ್ಲಿ ಸಿಗತೊಡಗಿತು ಮುದ್ದಾದ ಮಗಳಿಗೆ ಶುಭ ದಿನವನ್ನ ರಾಜ್ಯ ಜೋತಿಷಿಗಳ ಸಮಾಗಮದಲ್ಲಿ ನಾಮಕರಣ ಸಮಾರಂಭ ನೇರವೇರಿಸಿ ಯುವರಾಣಿ ವಸುಂದರಾ ಎಂಬ ಹೆಸರಿಟ್ಟರು. ಹೆಸರಿಗೆ ತಕ್ಕಂತೆ ಹರ್ಷಚಿತ್ತಳು ,ಗಮನ ಸೆಳೆಯ ಮೊಗವು,ಉದಾರತೆಯು ಆಕೆಯಲ್ಲಿ ತುಂಬಿತ್ತು. ಗಂಡು ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣವೂ ಸೇರಿದಂತೆ ಸಕಲ ವಿಧ್ಯೆಗಳನ್ನ ಅರಳಿರಾಜ ತನ್ನ ಮಗಳಿಗೆ ಕಲಿಸತೊಡಗಿದ ಬಾಲ್ಯದಲ್ಲಿಯೇ ವಸುಂದರಾ ಗಂಭೀರವಾಗಿ ಸಮರ್ಥವಾಗಿ ವಿಧ್ಯೆಗಳನ್ನ ಕಲಿಯತೊಡಗಿದಳು. ಮಹಾ ಬುದ್ದಿವಂತೆಯಾದ ರಾಜಕುಮಾರಿ ವಸುಂದರಾ ಬಾಲ್ಯದಿಂದಲೇ ರಾಜ್ಯದ ನಾಗರೀಕರ ಕಷ್ಠಗಳನ್ನ ಅರಿಯತೊಡಗಿದಳು ಜಾತಿ ಬೇದವನ್ನ ಮಾಡಬಾರದು ಸರ್ವರೂ ಸಮಾನರು ನಾವೆಲ್ಲ ಮಾನವರೂ ಎಂಬ ಚಿತ್ತದಿಂದ ಆಡುತ್ತಾ ಕಲಿಯುತ್ತಾ ಬೆಳೆಯತೊಡಗಿದಳು. ಆದರೆ ಇಲ್ಲಿ ಇನ್ನೊಂದು ವಿಚಾರ ಹೇಳಲು ಮರೆತಿದ್ದೆ ಅರಳಿ ರಾಜ ತುಂಬಾ ಶಕ್ತಿಶಾಲಿ ರಾಜನೂ ಹೌದು ಅದರಂತೆ ಆತನಲ್ಲಿ ಜಾತಿಯತೇ ಮತ್ತು ಮೇಲು ಕೀಳು ಭಾವನೆ ಇತ್ತು ಅವರವರ ಜಾತಿ ಧರ್ಮಕ್ಕೆ ಅನುಸಾರವಾಗಿ ಬಾಳಬೇಕು,ದುಡಿಯಬೇಕು ಸದಾ ಉಳ್ಳವರ ಮುಂದೆ ತಲೆಬಾಗಿ ನಿಲ್ಲಬೇಕು ಇಂತಹ ಮನಸು ಅವನದಾಗಿತ್ತು ಆದರೂ ಪ್ರಜೆಗಳಿಗೆ ಸಲ್ಲಬೇಕಾದ ಸವಲತ್ತುಗಳನ್ನ ನೀಡಿ ಸಲಹುತ್ತಿದ್ದ. ವಸುಂದರಾ ಒಂದು ತರಹದಲಿ ಎಲ್ಲವೂ ದೊರೆತರೂ ಒಂಟಿತನ ಕಾಡತೊಡಗಿತು ಕಾರಣ ತಂದೆ ಅರಳಿರಾಜನ ಅತಿಯಾದ ಪ್ರೀತಿ ಅವಳನ್ನ ಅರಮನೆಯ ಪಂಜರದ ಗಿಳಿಯಂತೆ ಮಾಡಿತ್ತು. ಬೇಕಿದ್ದು ಬೇಡದ್ದು ಎಲ್ಲವನ್ನ ದೊರಕುವಂತೆ ಮಾಡಿದ್ದ ರಾಜ ತನ್ನ ಮಗಳನ್ನ ಅರಮನೆ ಇಂದ ಆಚೆ ಕಳಿಸುತ್ತಿರಲಿಲ್ಲ ಮಗಳ ಮೇಲಿನ ಅತಿಯಾದ ಕಾಳಜಿ ಸಹಾ ಇದಾಗಿತ್ತು ಮಗಳಿಗೆ ಯಾವ ತೊಂದರೆಯೂ ಬಾರದಿರಲಿ ಅವಳಿಗೆ ಯಾರಿಂದಲೂ ಯಾವ ಸನ್ನಿವೇಶದಲ್ಲಿಯೂ ಕೆಡುಕು ಬರದಿರಲಿ ಎಂಬ ಅತಿಯಾದ ಕಾಳಜಿ ವಸುಂದರಾ ಬಾಳಲ್ಲಿ ಒಂಟಿತನ ಮೂಡಿಸಿತ್ತು. ಬೆಳೆದು ದೊಡ್ಡವಳಾದ ವಸುಂದರಾ ಪ್ರತಿ ನಿತ್ಯ ಅರಮನೆ ಮೊಗಸಾಲೆಯ ಕಿಟಕಿಯಲಿ ಕುಳಿತು ಹೊರಜಗತ್ತನ್ನ ನೋಡುತ್ತ ಕುಳಿತುಕೊಳ್ಳುತ್ತಾಳೆ ದಿನ ಕಳೆದಂತೆ ಅರಮನೆಯ ಸಖಿಯರು ಪರಿಚಾಲಕರು ಅಂಗರಕ್ಷಕರು ಬೆಸರ ಅನಿಸತೊಡಗಿದೆ ದಿನ ನೋಡಿದ ಮುಖಗಳೆ ಇವೆಲ್ಲ ಹೊಸ ಜಗತ್ತು ಬೇಕು ಹೊರಗೆ ಸುತ್ತಾಡಬೇಕು ಎಂಬ ಆಸೆ ಮನಸಿನಲ್ಲಿ ಕಾಡತೊಡಗಿದೆ ತಂದೆಯ ಬಳಿ ಹಲವು ಸಲ ತಿಳಿಸಿದರೂ ಅರಳಿರಾಜ ನಿರಾಕರಿಸಿಬಿಟ್ಟಿದ್ದ. ಮೊಗಸಾಲೆಯ ಕಿಟಕಿಯಲ್ಲಿ ಏನನ್ನೊ ನೋಡುತ್ತಾ ಕುಳಿತಿದ್ದ ವಸುಂದರಾ ಹತ್ತಿರ ಜೊರಾಗಿ ಬಂದ ಪಾರಿವಾಳ ಕಿಟಕಿಗೆ ಬಡಿದು ಕೆಳಗೆ ಬಿದ್ದು ಬಿಟ್ಟಿತು ತಕ್ಷಣ ಗಮನಿಸಿದ ವಸುಂದರಾ ಭಟರಿಗೆ ಅದನ್ನು ಹಿಡಿದು ತರಲು ಹೇಳಿದರು ಅವಳ ಆಜ್ಞೆಯಂತೆ ತಂದು ಅವಳ ಕೈಗೆ ಇರಿಸಿದಳು ಹದ್ದಿನಿಂದ ತಪ್ಪಿಸಿಕೊಳ್ಳಲು ವೇಗವಾಗಿ ಹಾರಿಬಂದು ಅಚಾನಕ್ಕಾಗಿ ಕಿಟಕಿಗೆ ಬಡಿದಿದ್ದ ಪಾರಿವಾಳ ರೆಕ್ಕೆ ಮತ್ತು ಕಾಲಿಗೆ ಪೆಟ್ಟು ತಿಂದು ಹಾರದ ಸ್ತಿತಿಯಲ್ಲಿ ಇದ್ದದ್ದು ನೋಡಿ ರಾಜಕುಮಾರಿಗೆ ಮರುಕ ಹುಟ್ಟಿ ಬಂದಿತ್ತು ತಕ್ಷಣ ಅದರ ಉಪಚಾರವನ್ನ ಮಾಡಿ ಅದಕ್ಕೆ ಔಷದಿಗಳನ್ನ ಸಖಿಯರ ಮುಖಾಂತರ ತರಿಸಿ ಸಂತೈಸಿದಳು. ನೋವಿಗೆ ಮುಲಾಮು ತಾಗುತ್ತಿದ್ದಂತ್ತೆ ಪಾರಿವಾಳಕ್ಕೆ ಯಾರೋ ನನ್ನ ರಕ್ಷಿಸುತ್ತಿದ್ದಾರೆ ಎಂದು ಮನಸಿನಲ್ಲಿ ಅಂದುಕೊಳ್ಳುತ್ತಾ ಸುಮ್ಮನೆ ರಾಜಕುಮಾರಿಯ ಮಡಿಲಲ್ಲಿ ಕುಳಿತು ಬಿಟ್ಟಿತು. ಹೀಗೆ ಸುಮಾರು ಐದಾರು ದಿನಗಳ ತನಕ ಅರಮನೆಯಲ್ಲಿ ವಸುಂದರಾ ಚಿಕಿತ್ಸೆ ನೀಡಿ ಪಾರಿವಾಳವನ್ನ ರಕ್ಷಿಸತೊಡಗಿದಳು. ಇನ್ನೆರಡು ದಿನ ಕಳೆವ ಒತ್ತಿಗೆ ನಿಧಾನವಾಗಿ ಹಾರಲು ಶುರುಮಾಡಿದ ಪಾರಿವಾಳವ ಕಂಡ ರಾಜಕುಮಾರಿಗೆ ಏನೋ ಒಂದು ಸಂತಸ ಹಾರುತ್ತಾ ಹಾರುತ್ತಾ ಅವಳಿಗೆ ಸಂತೋಷವ ನೀಡುವ ಪಾರಿವಾಳ ಅವಳಿಗೆ ಅರಿವಿಲ್ಲದೆ ಹೊಸ ಜೊತೆಗಾರ ಸ್ನೇಹಿತನಾಗಿ ಹಿಡಿಸಿತ್ತು. ನಂತರದ ದಿನಗಳಲ್ಲಿ ರಾಜಕುಮಾರಿಯ ಜೊತೆ ಅರಮನೆಯಲ್ಲಿಯೇ ಕಾಯಂ ನೆಲೆಸಿತು ಅಲ್ಲಿಯೇ ಹಾರುತ್ತ ಅವಳ ಬಳಿಯೇ ಕುಳಿತುಕೊಂಡು ಕಾಳುಗಳ ತಿನ್ನುತ್ತಾ ಹೊರಗೆ ಹಾರಿ ಮರಳಿ ಮತ್ತೆ ಇವಳ ಬಳಿಯೇ ಬರತೊಡಗಿತು ಪಾರಿವಾಳವು ಇವಳನ್ನ ತುಂಬಾ ಹಚ್ಚಿಕೊಂಡು ಬಿಟ್ಟಿತು. ಅರಮನೆಯಲ್ಲಿ ಅಂದು ಬಣ್ಣಗಳ ಹಬ್ಬ ಸಖಿಯರ ಜೊತೆ ವಸುಂದರಾ ಬಣ್ಣಗಳಲ್ಲಿ ಬಣ್ಣವಾಗಿ ಪಾರಿವಾಳವನ್ನು ಬಣ್ಣಮಯವಾಗಿಸಿದ್ದಳು. ಸ್ವಲ್ಪ ಸಮಯದ ಬಳಿಕ ಪುರ್ ಎಂದು ಹೊರಗೆ ಹಾರಿದ ಪಾರಿವಾಳ ದೂರದ ಹೊಳೆಯ ದಡಕ್ಕೆ ಬಂದಿತ್ತು. ಬಟ್ಟೆ ತೊಳೆಯುತ್ತಾ ಎಂದಿನಂತೆ ಕೆಲಸದಲ್ಲಿ ನಿರತನಾಗಿದ್ದ ವಿಜಯರಾಮನಿಗೆ ಆ ಬಣ್ಣ ಬಳಿದ ಪಾರಿವಾಳವ ಕಂಡು ಮರುಕ ಬಂದಿತ್ತು ಯಾರೋ ಇದರ ಮೈಗೆಲ್ಲ ಹೀಗೆ ಹಿಂಸಿಸಿ ಬಣ್ಣ ಬಳಿದಿದ್ದಾರೆ ಎಂದು ಹಿಡಿದು ನಿಧಾನಕ್ಕೆ ಮೈಸವರಿ ನೀರಿನಿಂದ ತೊಳೆದು ಶ್ವೇತವರ್ಣಕ್ಕೆ ಬರಿಸಿದ್ದ. ಬಣ್ಣದ ಕಿರಿ ಕಿರಿ ಇಂದ ನೀರಿನಲ್ಲಿ ಸ್ನಾನಮಾಡಲು ಬಂದಿದ್ದ ತನ್ನ ಮೈತೊಳೆದ ರೀತಿ ನೋಡಿ ಪಾರಿವಾಳಕ್ಕೂ ಒಂದು ಬಗೆಯ ಹಿತವನಿಸಿತ್ತು. ಕೈಯಿಂದ ಹಠಾತ್ತಾನೆ ಹಾರಿ ಮತ್ತೆ ಅರಮನೆಗೆ ಮರಳಿ ಬಂದು ರಾಜಕುಮಾರಿಯ ಕೊಠಡಿ ಸೇರಿ ಕುಳಿತುಬಿಟ್ಟಿತು. ಮಜ್ಜನ ಮಗಿಸಿ ಬಂದ ವಸುಂದರಾ ಪಾರಿವಾಳವ ಕಂಡು ಆಶ್ಚರವಾಯಿತು ಅರೇ ಯಾರಿದರ ಮೈ ತೊಳೆದವರು ತಕ್ಷಣವೇ ಸಖಿಯರ ಕೂಗಿದಳು ಯಾರಲ್ಲು ಉತ್ತರವಿಲ್ಲ ಎಲ್ಲರದೂ ಒಂದೆ ಮಾತು ಗೊತ್ತಿಲ್ಲ ರಾಜಕುಮಾರಿ ನಾವು ನಿಮ್ಮೊಡನೆ ಇದ್ದೆವಲ್ಲ. ಅವಳಲ್ಲಿ ಉತ್ತರ ಸಿಗದಂತೆ ಈ ಪ್ರೆಶ್ನೆ ಉಳಿದು ಬಿಟ್ಟಿತು. ಜನರ ಬಾಯಿಂದ ಬಾಯಿಗೆ ರಾಜಕುಮಾರಿ ಮತ್ತು ಪಾರಿವಾಳದ ಗೆಳೆತನ ಅಬ್ಬತೊಡಗಿತು. ವಸುಂದರಾಳಷ್ಟೆ ಅರಮನೆಯಲ್ಲಿ ಪಾರಿವಾಳಕ್ಕೂ ಗೌರವ ಸಿಗತೊಡಗಿತು ಅವಳ ಅನುಮತಿ ಇಲ್ಲದೆ ಯಾರು ಅದನ್ನ ಮುಟ್ಟುವಂತೆ ಇರಲಿಲ್ಲ ಅದಕ್ಕೂ ಅಷ್ಟೆ ರಾಜಕುಮಾರಿಯ ಬಿಟ್ಟು ಮತ್ತೊಬ್ಬರ ಬಳಿ ಇರಲು ಇಷ್ಟವಿರಲಿಲ್ಲ. ವಸುಂದರಾ ಕೇಶ ಕಟ್ಟುವಾಗ ಪಕ್ಕದಲ್ಲೆ ಇದ್ದ ಪಾರಿವಾಳದ ಹಣೆಗೆ ಬೊಟ್ಟನ್ನ ಇಟ್ಟು ಕ್ಷಣಕಾಲ ಮುದ್ದಾಡಿದಳು ನಂತರ ಹೊರಗೆ ಹಾರಿದ ಆ ಹಕ್ಕಿ ನೇರವಾಗಿ ನದಿಯ ದಡದಲ್ಲಿ ಇಳಿಯಿತು ನೀರು ಕುಡಿದು ದಡದಲ್ಲಿ ಏನನ್ನೋ ತಿನ್ನುತ್ತಿದ್ದದ್ದನ್ನು ಗಮನಿಸಿದ ವಿಜಯರಾಮ ಇದು ಅಂದು ಬಂದ ಬಣ್ಣ ಬಳಿದ ಪಾರಿವಾಳ ಮತ್ತೆ ಯಾರೋ ಇದಕ್ಕೆ ಬೊಟ್ಟು ಇಟ್ಟಿದ್ದಾರೆ ಅನ್ನುತ್ತಾ ನೇರವಾಗಿ ಅದರ ಬಳಿಗೆ ಬಂದು ಕೈಯಲ್ಲಿ ಹಿಡಿದು ತೊಳೆದು ಬಿಟ್ಟ ಅಂದು ನನ್ನ ಮೈತೊಳೆದವನು ಇವನೆ ಎಂದು ಅರಿತಿದ್ದ ಪಾರಿವಾಳ ಭಯವಿಲ್ಲದೆ ಆತನ ಕೈ ಸೇರಿತ್ತು. ಈತನೂ ರಾಜಕುಮಾರಿ ತರಹ ಒಳ್ಳೆಯವನೆ ತೊಂದರೆ ಕೊಡದವನೆಂದು ಅದಕ್ಕೆ ನಂಬಿಕೆ ಬರಲಾರಂಭಿಸಿತು ಮತ್ತೆ ಅಂದಿನಂತೆ ಕಾ ಕೊಸರಿಕೊಂಡು ಅರಮನೆಗೆ ಹಾರಿ ಬಂದು ಬಿಟ್ಟಿತು. ಗೆಳೆಯ ಪಾರಿವಾಳ ಬಂದದ್ದು ಗಮನಿಸಿದ ವಸುಂದರಾ ಹಿಡಿದು ಮುದ್ದಾಡಲು ನೋಡಿದಾಗ ಹಣೆಯಲ್ಲಿ ಅವಳು ಇಟ್ಟ ಬೊಟ್ಟಿಲ್ಲ ಮತ್ತೆ ಆಶ್ಚರ್ಯ ಯಾರು ಇದರ ಹಣೆಯನ್ನು ತೊಳೆದು ಕಳಿಸಿದ್ದಾರೆ? ಕೂತುಹಲವೂ ಬರತೊಡಗಿತು ಮರುದಿನ ಮತ್ತೆ ಹಣೆಗೆ ಬೊಟ್ಟು ಇಟ್ಟು ಬಿಟ್ಟಳು ಕೆಲ ಸಮಯದ ಬಳಿದ ಹೊರಗೆ ಹಾರಿಹೋಯ್ತು ಮರಳಿ ಬಂದಾಗ ಶುಭ್ರವಾಗಿತ್ತು ಅವಳಿಗೆ ಇನ್ನಷ್ಟು ಕೂತುಹಲ ಬರಲಾರಂಭಿಸಿತು ಮತ್ತೆ ಮತ್ತೆ ಬಣ್ಣ ಬಳಿದಂತೆ ಹಾರಿ ಹೋಗುತ್ತಿತ್ತು ಮರಳಿ ಬಂದಾಗ ಮೈ ತೊಳೆದು ಕಳಿಸಿರುವುದು ಕಾಣುತ್ತಿತ್ತು. ಅರಮನೆಯ ಪಾಲಕರನ್ನ ಕರೆಸಿ ಇದರ ಗುಟ್ಟು ತಿಳಿಯಬೇಕು ಈ ಪಾರಿವಾಳ ಎಲ್ಲಿ ಹೋಗಿಬರುತ್ತದೆ ಎಂಬುದನ್ನು ಪತ್ತೆ ಮಾಡಲು ಹೇಳಿದಳು ವಸುಂದರಾಳ ಆಜ್ಞೆಯಂತೆ ಪಾರಿವಾಳದ ಜಾಡು ಹಿಡಿದ ಅರಮನೆ ಪಾಲಕರು ನದಿಯ ದಂಡೆಯಲ್ಲಿ ವಿಜಯರಾಮನ ಕಾಯಲ್ಲಿ ಪಾರಿವಾಳ ಇದ್ದದ್ದು ಗಮನಿಸಿದರು. ಅಲ್ಲಿಂದ ಅರಮನೆಗೆ ಬಂದ ಪಾಲಕರು ರಾಜಕುಮಾರಿಯ ಮುಂದೆ ನೆಡೆದ ಪ್ರಸಂಗವನ್ನ ತಿಳಿಸಿದರು ಕೂಡಲೆ ಆ ವ್ಯಕ್ತಿಯನ್ನ ನನ್ನೆದುರು ಕರೆತನ್ನಿ ಊ ಹೊರಡಿ ಎಂದ ವಸುಂದರಾ ಮಾತಿಗೆ ವಿಜಯರಾಮನ ಬಳಿ ಬಂದು ಅಯ್ಯ ಅಗಸನೇ ನೀನು ಕೂಡಲೆ ರಾಜಕುಮಾರಿಯನ್ನ ಕಾಣಬೇಕಿದೆ ಇದು ಅವರ ಆದೇಶ ಎಂದರೂ ನಾನು ಅರಮನೆಯ ರಾಜಕುಮಾರಿಯನ್ನ ಕಾಣಬೇಕೆ? ಯಾಕೆ ರಾಜಭಟರೇ ಎಂದಾಗ ಪಾರಿವಾಳದ ವಿಷಯ ತಿಳಿಸಿದರೂ ಕೂಡಲೆ ವಿಜಯರಾಮ ಅರಮನೆ ಪಾಲಕರ ಜೊತೆ ವಸುಂದರಾ ಮುಂದೆ ಬಂತು ನಿಂತ. ಪ್ರತಿ ನಿತ್ಯ ಬಿಸಿಲು ಮಳೆ ಎನ್ನದೆ ಬಟ್ಟೆಗಳನ್ನ ಒಗೆದು ಒಗೆದು ಮೈ ಬೆವರು ಕಾಲಿಯಾಗಿ ಮೈ ಕೈ ಕುಸ್ತಿಪಟುವಿನಂತೆ ದೃಢಕಾಯನಾಗಿದ್ದ ಇವನನ್ನ ಕಂಡ ವಸುಂದರಾ ಮನದಲ್ಲೆ ಆಹಾ ಅದೆಂತ ಯುವಕನೀತ ಸುಂದರನೂ ಮನಸೆಳೆವ ಮೈಕಟ್ಟು ಬೆಳೆಸಿರುವ ಯಾರು ಈತ

ಪಾರಿವಾಳ ರಾಣಿ Read Post »

You cannot copy content of this page

Scroll to Top