ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಗಝಲ್

ಗಝಲ್ ರೇಷ್ಮಾ ಕಂದಕೂರ ಮಾತು ಮೌನಗಳ ನಡುವಿನ ಸಮರಕೆ ಕೊನೆಯಿಲ್ಲಸಹನೆಯ ಹೆಸರಿಗೆ ಕಿಂಚಿತ್ತೂ ಬೆಲೆಯಿಲ್ಲ ರೋಗಗ್ರಸ್ತ ಮನಸಿಗೆ ಉಪಶಮನದ ಅವಶ್ಯಕತೆ ಇದೆಚಿಗುರೊಡೆದೆ ಬಾಂಧವ್ಯಕೆ ಸಹಕಾದರ ಬಳುವಳಿಯಿಲ್ಲ ಜಗದ ಜಂಜಡಕೆ ನಿತ್ಯ ರಂಗುರಂಗಿನ ಆಟಉದ್ವೇಗ ವಿಷಾದದ ನಡುವಿನ ಪ್ರಸ್ತಾವನೆಗೆ ಕೊನೆಯಿಲ್ಲ ಬಡಿವಾರದಿ ಊಹಾಪೋಹಗಳು ತುಂಬಿ ತುಳುಕಿವೆಹಮ್ಮಿನ ಕೋಟೆಯಲಿ ಮೆರೆದವರಿಗೆ ಉಳಿಗಾಲವಿಲ್ಲ ಅಂಗಲಾಚಿ ಬೇಡುತಿದೆ ಭಿನ್ನತೆಗೆ ವಿರಮಿಸೆಂದು ರೇಷಿಮೆ ಮನಒಳಗಣ್ಣು ತೆರೆಯದೆ ನಿರ್ಣಯಿಸಿದರೆ ಕೊಡಲಿ ಏಟಿಗೆ ಕೊನೆಯಿ *****************************

ಗಝಲ್ Read Post »

ಕಾವ್ಯಯಾನ

ಹಗಲಲಿ ಅರಳದ ವಿರಹಿಣಿ

ಕವಿತೆ ಹಗಲಲಿ ಅರಳದ ವಿರಹಿಣಿ ಅನಿತಾ ಪಿ. ಪೂಜಾರಿ ತಾಕೋಡೆ ಅಂದು…ಹಿಂದೆಂದೂ ಮೂಡದ ಒಲವೊಂದು ಅನುವಾದಾಗಅವನ ಹಿರಿತನವನು ಮರೆತುನನ್ನ ಮಗುತನವನೇ ಪೊರೆದುಇತಿ ಮಿತಿಯ ರೇಖೆಗಳಿಂದ ಮುಕ್ತವಾಗಿಹಕ್ಕಿಹಾಡನು ಮನಬಿಚ್ಚಿ ಹಾಡಿದಾಗಲೆಲ್ಲಅವನು ಕೇಳುತ್ತಿದ್ದುದೊಂದೇ ನಿತ್ಯ ದಗದಗಿಸುತ್ತಲೇ ಊರೂರು ಸುತ್ತುವಮುಟ್ಟಿದರೆ ಮುನಿದು ಬಿಡುವಕಟು ಮನಸ್ಸಿನ ಸೂರ್ಯ ನಾನುಎಲೇ ಮುದ್ದು ಪಾರಿಜಾತವೇನಾನೆಂದರೆ ನಿನಗ್ಯಾಕೆ ಇಷ್ಟೊಂದು ಪ್ರೀತಿ ಆಗ…ನನ್ನಾಲಯದಲ್ಲಿ ಅವನು ಇನ್ನಷ್ಟು ಪ್ರಕಾಶವಾಗುತ್ತಿದ್ದಬೆಳ್ಳನೆ ಹೊಳಪು ಕೇಸರಿ ಕದಪಿನಲಿ ರಂಗು ಮೂಡಿಅವನಿರುವಿನಲಿ ಇನಿತಿನಿತಾಗಿ ಕರಗುತ್ತಲೇನಾನೆಂದಿಗೂ ನಿನ್ನವಳೆನ್ನುತಿದ್ದೆ ಅವನೂ ಸುಮ್ಮನಿರುತಿರಲಿಲ್ಲನನ್ನ ಇತಿಹಾಸವನೇ ಬಯಲಿಗೆಳೆಯುತಿದ್ದಸುರಭಿ ವಾರಿಣಿಯರ ಸಾಲಿನವಳುಕ್ಷೀರ ಸಮುದ್ರದೊಳವಿರ್ಭವಿಸಿದಪಂಚವೃಕ್ಷಗಳಲಿ ನೀನೋರ್ವಳುಇಂದ್ರನ ನಂದನವನದಲ್ಲಿ ಪಲ್ಲವಿಸಿದವಳುಸತ್ಯಭಾಮೆಯೊಲವಿಗೆ ಕೃಷ್ಣ ನ ಜೊತೆ ಬಂದವಳುನಿನಗ್ಯಾಕೆ ನನ್ನ ಸಾಂಗತ್ಯ ಬಯಕೆ? ವಾದ ವಿವಾದಗಳ ನಡುವೆ ಪ್ರೀತಿ ನಿಜವಾಗಿದ್ದು ಸುಳ್ಳಲ್ಲನನಗೂ ಅವನಿಗೂ ಬಾನು ಭುವಿಯಷ್ಟೇ ಅಂತರವಿದ್ದರೂಕ್ಷಣಕ್ಷಣಕೂ ನನ್ನ ಸನ್ನಿಧಿಯಲ್ಲೇ ಇರುತಿದ್ದನಲ್ಲಾ… | ಕೆಲವೊಮ್ಮೆ ಕಪ್ಪು ಮೋಡ ಕವಿದುಪರಿಛಾಯೆಯ ಲವಲೇಶವಿಲ್ಲದೆಹೇಳದೇ ಕೇಳದೇ ಏಕಾಏಕಿ ಮರೆಯಾದಾಗಕಾಯುವಿಕೆ ಅಸಹನೀಯವಾಗಿಅವನ ಓರಗೆಯವರಲ್ಲಿ ವಿಚಾರ ಮಾಡಿದ್ದುಂಟುಅವನ ಕ್ಷೇಮದ ಸುದ್ದಿ ತಿಳಿಯಲು ಹುಚ್ಚಳಾಗಿದ್ದುಂಟು ನಿತ್ಯ ಹೊಸದಾಗಿ ಅರಳುವ ನಾನುಒಂದೊಂದು ನೆಪ ಹೇಳಿ ಇಲ್ಲವಾಗುವ ಅವನುಮತ್ತೆ ಬಂದು ಹೇಳುವ ಕಥೆ ವ್ಯಥೆಗಳುಬಾಗುವಿಕೆಯಿಲ್ಲದೆ ಕ್ಷೀಣವಾಗುತಿಹ ಭಾವಾನುರಾಗಗಳುಹೀಗೆಯೇ ನಡೆದಿತ್ತು ವರ್ಷಾನುವರ್ಷ ಅದೇ ವಿರಹದ ಸುಳಿಯಲ್ಲಿ ನಲುಗಿನಾನೀಗ ಹಗಲಲಿ ಎಂದೂ ಅರಳದ ವಿರಹಿಣಿ ಯಾರೂ ಸುಳಿಯದ ಕಪ್ಪಿರುಳಿನಲಿಮೊಗ್ಗು ಮನಸು ಹದವಾಗಿ ಒಡೆದುನೆಲದ ಮೇಲುರುಳಿ ಹಗುರಾಗುತ್ತೇನೆಅವ ಬರುವ ವೇಳೆಯಲಿಅದೇನೋ ನೆನೆದು ಬಿದ್ದಲ್ಲೇ ನಗುತ್ತೇನೆ.ನಮ್ಮೀರ್ವರ ಮಾತಿರದ ಮೌನಕೆಒಳಗೊಳಗೆ ಸುಡುವ ಝಳದಲಿ ತೆಳುವಾಗುತ್ತೇನೆ ಅವನೂ ಹಾಗೆಯೇ ಕಂಡೂ ಕಾಣದಂತೆಮೂಡಣದಿಂದ ಪಡುವಣಕ್ಕೆ ತಿರುಗುತ್ತಲೇ ಇರುತ್ತಾನೆನಾನೂ ನೋಡು ನೋಡುತ್ತಲೇನೆಲದ ಗುಣವನು ಒಪ್ಪಿಕೊಳ್ಳುತ್ತೇನೆಬರುವ ನಾಳೆಯಲಿ ಮತ್ತೆ ಗೆಲುವಾಗಲು ***************************.

ಹಗಲಲಿ ಅರಳದ ವಿರಹಿಣಿ Read Post »

ಕಾವ್ಯಯಾನ

ಎಲ್ಲಾ ಹೆಣ್ಣು ಹೆಣ್ಣು ಹೆಣ್ಣು

ಕವಿತೆ ಎಲ್ಲಾ ಹೆಣ್ಣು ಹೆಣ್ಣು ಹೆಣ್ಣು ಸುಧಾ ಹಡಿನಬಾಳ ಹೇ ದುರುಳ ವಿಕೃತ ಕಾಮಿಗಳೆನಿಮ್ಮ ದಾಹ, ಕ್ರೌರ್ಯಕೆ ಕೊನೆಯಿಲ್ಲವೇನು? ನೀವು ಪೂಜಿಸುವ ಜಗನ್ಮಾತೆ ಹೆಣ್ಣುನಿಮ್ಮ ಹೆತ್ತ ಜನ್ಮದಾತೆ ಹೆಣ್ಣುನಿಮ್ಮ ಪೊರೆವ ಭೂಮಿತಾಯಿ ಹೆಣ್ಣುನಿಮ್ಮ ಮನೆ ಬೆಳಗುವ ಮಡದಿ ಹೆಣ್ಣುಮನೆತುಂಬ ಕಿಲ ಕಿಲ ಗೆಜ್ಜೆನಾದ ಹೆಣ್ಣುಎಲ್ಲಾ ಹೆಣ್ಣು ಹೆಣ್ಣು ಹೆಣ್ಣುಆದರೂ ಅನ್ಯ ಹೆಣ್ಣಿನ ಮೇಲೇಕೆ ನಿಮ್ಮ ಕಣ್ಣು? ಒಮ್ಮೆ ಯೋಚಿಸಿ ಕಲ್ಪಿಸಿಕೊಳ್ಳಿನಿಮಗೂ ಒಬ್ಬ ಹೆಣ್ಣು ಮಗಳಿದ್ದುಅವಳ ಮೇಲೂ ಇಂತದೆ ಭಯಾನಕದೌರ್ಜನ್ಯ, ಕ್ರೌರ್ಯ ನಡೆದರೆಸಹಿಸಲಾದೀತೇ ಊಹಿಸಿಕೊಳ್ಳಲಾದೀತೇ? ಎಲ್ಲಾ ಹೆಣ್ಣು ಮನೆಯ ಮಕ್ಕಳಂತಲ್ಲವೆ?ಸಾಕು ನಿಲಿಸಿ ನಿಮ್ಮ ವಿಲಾಸೀ ಪೌರುಷವತಣಿಸಿಕೊಳ್ಳಿ ಮಡದಿಯಿಂದಲೇ ನಿಮ್ಮ ದಾಹವಬದುಕಲು ಬಿಡಿ ಹೆಣ್ಣು ಸಂಕುಲವಉಳಿಸಿ ಗೌರವಿಸಿ ಅವರ ಸ್ವಾತಂತ್ರ್ಯವ *****************************

ಎಲ್ಲಾ ಹೆಣ್ಣು ಹೆಣ್ಣು ಹೆಣ್ಣು Read Post »

ಕಾವ್ಯಯಾನ

ಕಳೆದವರು

ಕವಿತೆ ಕಳೆದವರು ಅಬ್ಳಿ ಹೆಗಡೆ. ಕಳೆದವರು ನಾವುಕಳೆದವರು.ಉಳಿದಿಹ ಗಳಿಕೆಯನಿತ್ಯವೂ ಎಣಿಸುತ್ತಬೆಳೆಸಲಾಗದ್ದಕ್ಕೆಅಳುವವರು.ಘಾಢಕತ್ತಲಿನಲ್ಲಿಕಪ್ಪುಪಟ್ಟಿಯು ಕಣ್ಗೆಎಲ್ಲೆಲ್ಲೊ ಗುದ್ದುತ್ತಒದ್ದಾಡುವವರು.ಚೆಲುವ ನಂದನದಲ್ಲಿಎಂದೆಂದೂ ನಿಂತಿದ್ದುಕಣ್ಣಹಸಿವಿಂಗದಲೆಸಾಯುವವರು.ಪ್ರೀತಿಯಮ್ರತದ ಕಲಶಎದೆ ನೆಲದಿ ಹೂತಿಟ್ಟುಪ್ರೀತಿಯಾ ಬರದಲ್ಲೆಬದುಕಿ ಸತ್ತವರು.ದೀಪವಾರಿದ ಕೋಣೆಕತ್ತಲಲೆ ಕುಳಿತಿದ್ದುಕಪ್ಪು ಶಾಯಲಿ ಬೆಳಕಗೆರೆಯೆಳೆವರು.ನಡೆವ ಹಾದಿಯ ಬದಿಗೆಆಲದ ನೆರಳಿದ್ದೂಬಿಸಿಲಲ್ಲೆ ಮಲಗಿದ್ದುದಣಿವ ಕಳೆವವರು.ತನ್ನೊಳಗೇ ಅನಂತಶಾಂತಿಯ ಕಡಲಿದ್ದುಶಾಂತಿಯ ಹುಡುಕುತ್ತಸಂತೆಯಾದವರು.ಕಳೆದವರು ನಾವುಕಳೆದವರು.ಎಷ್ಟುಕಳೆದರೂ ಸ್ವಲ್ಪಉಳಿದವರು. **********************

ಕಳೆದವರು Read Post »

ಪುಸ್ತಕ ಸಂಗಾತಿ

ಗಿರಗಿಟ್ಟಿ

ಪುಸ್ತಕ ಪರಿಚಯ ಗಿರಗಿಟ್ಟಿ ಲೇಖಕರು: ತಮ್ಮಣ್ಣ ಬೀಗಾರ. ‌ಪ್ರಕಾಶನ: ಪ್ರೇಮ ಪ್ರಕಾಶನ ಮೈಸೂರು.ಮೊಬೈಲ ನಂ: ೯೮೮೬೦೨೬೦೮೫ಪುಟ: ೧೦೦.ಬೆಲೆ:೯೦ ರೂ.ಪ್ರಕಟಣೆ:೨೦೨೦ ಹಿರಿಯ ಕಿರಿಯರೆಲ್ಲ ಓದಬೇಕಾದ “ ಗಿರಗಿಟ್ಟಿ” ತಮ್ಮಣ್ಣ ಬೀಗಾರ ಅವರು ಮಕ್ಕಳಿಗಾಗಿ ಕತೆ, ಕವಿತೆ, ಪ್ರಬಂಧ, ಕಾದಂಬರಿಗಳನ್ನು ಬರೆಯುವುದರಲ್ಲಿ ತೊಡಗಿಸಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಹಿರಿಯ ಸಾಹಿತಿಗಳು. ಕಿರಿಯರನ್ನೂ ಗೌರವಿಸುವ ಸೌಮ್ಯ ಸ್ವಭಾವದವರು. ಹೀಗೆ “ಪ್ರಾಗಿ” ಕತೆಯ ಸನ್ನಿವೇಶ ಕುರಿತು ಮಾತನಾಡುವಾಗ ‘ಹುಡುಗರು ಕಪ್ಪೆಗೆ ಹಿಂಸೆ ಮಾಡುವುದು ಸಹಜ. ಅದನ್ನು ನೀವೇಕೆ ಬರವಣಿಗೆಯಲ್ಲಿ ಕಾಣಿಸಲಿಲ್ಲ ?’ಎನ್ನುವ ಪ್ರಶ್ನೆಗೆ ಹಿಂಸೆಯ ಆಚೆಗೂ ಇರುವ ಬಹಳಷ್ಟು ವರ್ತನೆಗಳನ್ನು ಕಾಣಿಸುವುದು ಮುಖ್ಯವಾಗಿದೆ ಎನ್ನುವುದರ ಮೂಲಕ ನನಗೆ ತುಂಬಾ ಅಚ್ಚರಿ ಮೂಡಿಸಿದವರು. ಕಲೆ ಮತ್ತು ಸಾಹಿತ್ಯಗಳೆರಡನ್ನು ಸಮ ಸಮವಾಗಿ ದುಡಿಸಿಕೊಂಡ ಕ್ರಿಯಾಶೀಲ ಸ್ನೇಹ ಜೀವಿಗಳು. ಇತ್ತೀಚೆಗೆ ಪ್ರಕಟವಾದ ಉಲ್ಟಾ ಅಂಗಿಯ ನಂತರ ಇದೀಗ “ಗಿರಗಿಟ್ಟಿ” ಎನ್ನುವ ೧೫ ಕತೆಗಳನ್ನು ಹೊಂದಿರುವ ಸಂಕಲನದ ಮೂಲಕ ನಮ್ಮ ಮುಂದಿದ್ದಾರೆ. ಮಲೆನಾಡಿನ ಪ್ರಕೃತಿ ಸೌಂದರ್ಯ ಮತ್ತು ಜೀವ ವೈವಿಧ್ಯತೆ ಈ ಕತೆಗಳಲ್ಲಿ ಕಂಡುಬರುವ ಪ್ರಮುಖ ಅಂಶವಾಗಿದ್ದರೂ ಈ ಬಾರಿ ಭಾವನಾತ್ಮಕ ಅಂಶಗಳೊಂದಿಗೆ ಪುಳಕಿತಗೊಳಿಸುತ್ತಾರೆ. ಇದಕ್ಕೆ ‘ಹಸಿವಾಗಿಲ್ವಾ’ ಕತೆಯಲ್ಲಿ ಹಸಿವನ್ನು ಕುರಿತು ತಾಯಿ ಆಡುವ ಮಾತು ನಡೆದುಕೊಳ್ಳುವ ರೀತಿಯ ಮೂಲಕ ಮಕ್ಕಳಲ್ಲಿ ಹುಟ್ಟುವ ಪ್ರಶ್ನೆಗಳು ಅವರ ಮತ್ತು ಓದುಗರ ಅಂತರಂಗವನ್ನು ಕಲಕುತ್ತವೆ. ನನ್ನ ಒಂದು ಅವಲೋಕನದ ಮೂಲಕ ಕಪ್ಪೆ ಇವರ ಬರವಣಿಗೆಯಲ್ಲಿ ಬಹು ವೈವಿಧ್ಯಮಯವಾಗಿ ಅಭಿವ್ಯಕ್ತಿಗೊಳ್ಳುವ ಬತ್ತದ ಒರತೆಯಾಗಿದೆ. ಇದಕ್ಕೆ “ಕಪ್ಪೆಯ ಕಣ್ಣು” ಕಥೆ ಉದಾಹರಣೆಯಾಗಿದೆ. ಮಕ್ಕಳು ಮತ್ತು ದೊಡ್ಡವರ ನಡುವಿನ ವರ್ತನೆಗಳನ್ನು ಸೂಕ್ಷ್ಮವಾಗಿ ತೌಲನಿಕವೆಂಬಂತೆ “ಕತ್ತಲು” ಕತೆಯ ಮೂಲಕ ಚಿತ್ರಿಸುವ ಇವರು ಮಕ್ಕಳ ಬೆರಗುಗಣ್ಣನ್ನು ಅರವತ್ತೊಂದರ ಹರಯದಲ್ಲೂ ಉಳಿಸಿಕೊಂಡಿದ್ದಾರೆ. “ರೋಹನ ಗಣಪು ಮತ್ತು ನಾನು” ಕತೆ ಆಧುನಿಕತೆಯಿಂದ ದೂರ ಇರುವ ಮಕ್ಕಳಲ್ಲಿ ಪ್ರತಿಭೆ ಹುದುಗಿರುವುದನ್ನು ಅನಾವರಣ ಮಾಡಿದರೆ, “ದೆವ್ವದ ಮರ” ಕತೆಯ ಮೂಲಕ ಮಕ್ಕಳ ಕಲಿಕೆಯ ಹೊಸ ಬಗೆಯ ಪ್ರಯೋಗವನ್ನು ಸೂಚ್ಯವಾಗಿ ಹೇಳುತ್ತಾರೆ. ಅಜ್ಞಾನವು ಭಯ ಹುಟ್ಟಿಸಿದರೆ ವಿಜ್ಞಾನವು ಜ್ಞಾನವನ್ನು ಹೆಚ್ಚಿಸುವುದಲ್ಲದೆ ಧೈರ್ಯವನ್ನೂ ಹೆಚ್ಚಿಸುವುದೆಂಬುದಕ್ಕೆ ಸಾಕ್ಷಿಯಾಗಿದೆ. ಓಇತಿ ರಾಜತಿರಾಜ ಕತೆಯಲ್ಲಿ ಮಕ್ಕಳ ಕುತೂಹಲ ಸೊಗಸಾಗಿ ಚಿತ್ರಿತವಾಗಿದ್ದರೆ ಹಣ್ಣು ತಿನ್ನೋ ಆಸೆ ಕತೆಯಲ್ಲಿ ಮಕ್ಕಳ ಸ್ವಭಾವಗಳ ಬಣ್ಣಗಳು ಪರಿಚಯವಾಗುತ್ತವೆ. “ಅಲ್ಲಿ ಕಂಡಿದ್ದೇನು” ಕತೆಯಲ್ಲಿ ಮಕ್ಕಳ ತುಂಟತನದ ಜೊತೆಗೆ ಹಾವಿನ ಪ್ರಸಂಗದಿಂದ ವಿಚಲಿತರಾಗಿ ಮನೆಗೆ ಬಂದಾಗ ಮನೆಯವರ ಎಲ್ಲ ಮುಖಗಳಲ್ಲಿಯೂ ಹಾವನ್ನೇ ಕಾಣುವುದು ವಾಸ್ತವಕ್ಕೆ ಹಿಡಿದ ಕನ್ನಡಿಯಂತಿದೆ. ಮಕ್ಕಳು ಸೂತ್ರ ಹರಿದ ಗಾಳಿ ಪಟದಂತೆ ಎಲ್ಲೆಂದರಲ್ಲಿ ಗಿರಕಿ ಹೊಡೆವ ಹುಮ್ಮಸ್ಸಿನ ಬುಗ್ಗೆಗಳಾಗಿರುತ್ತಾರೆ. ಇಂತಹ ಮುಕ್ತ ವಾತಾವರಣದ ಹಕ್ಕುದಾರರಿಗೆ ಪಾಲಕರು ಹಾಕುವ ಚೌಕಟ್ಟುಗಳು ವ್ಯಕ್ತಿತ್ವ ನಿರ್ಮಾಣದ ತೊಡಕುಗಳಾಗಬಲ್ಲವೆಂಬುದನ್ನು ಸೂಚ್ಯವಾಗಿ ಸೆರೆಹಿಡಿದಿದ್ದಾರೆ. ಮಣ್ಣಿನ ವಾಸನೆ ಕತೆಯಲ್ಲಿ ನಮ್ಮದಲ್ಲದ ವಸ್ತುವನ್ನು ನಮ್ಮದೆಂದುಕೊಂಡು ಬೀಗುವವರ ಗರ್ವ ಭಂಗ ನೈಜವಾಗಿ ನೈಸರ್ಗಿಕವಾಗಿಯೇ ಆಗುತ್ತದೆ ಎಂಬ ಸಿದ್ಧಾಂತವನ್ನು ಪ್ರತಿಪಾದಿಸುವಂತೆ ರಚಿಸಿದ್ದರೆ, ಹೆಗಲ ಮೇಲೆ ಕುಳಿತು ಕತೆಯ ಮೂಲಕ ಇಡೀ ಸಮಾಜದ ಚಿತ್ರಣವನ್ನೇ ಕಣ್ಣಿಗೆ ಕಟ್ಟುತ್ತಾರೆ. ಹೆಣ್ಣು ನಾಯಿ ಮರಿಯೊಂದು ಬೆಳೆದ ಮೇಲೆ ಸಾಕಷ್ಟು ಮರಿ ಹಾಕುತ್ತದೆ ಎಂಬ ಕಾರಣಕ್ಕೆ ತಾಯಿಯಿಂದ ಅಗಲಿಸುವುದು ಆ ಚಿಕ್ಕ ವಯಸ್ಸಿನಲ್ಲಿಯೇ ಆ ನಾಯಿ ಮರಿ ಹಸಿವೆಯಿಂದ ಬಳಲುವುದು ವೃದ್ಧರ ಮತ್ತು ಮಕ್ಕಳಲ್ಲಿ ಉಳಿದಿರುವ ಅಷ್ಟಿಷ್ಟು ಅಂತಃಕ್ಕರಣದಿಂದ ಜೀವ ಉಳಿಸಿಕೊಳ್ಳುವುದು ಕರುಣಾಜನಕವಾಗಿ ಮೂಡಿಬಂದಿದೆ. ಹೀಗೆ ಇಲ್ಲಿರುವ ಹದಿನೈದು ಕತೆಗಳೂ ವಸ್ತು ವೈವಿಧ್ಯತೆಯ ಮೂಲಕ ಗಮನ ಸೆಳೆಯುತ್ತವೆ . ಒಂದು ಚಂದದ ಮಕ್ಕಳ ಪುಸ್ತಕಕ್ಕೆ ಎಷ್ಟು ಹುಡಕಬೇಕೆಂದು ಪ್ರತಿಷ್ಟಿತ ಪುಸ್ತಕ ಮಳಿಗೆಗಳಿಗೆ ಭೇಟಿ ಕೊಟ್ಟವರಿಗೇ ಗೊತ್ತು. ಇಂತಹ ಸೊಗಸಾದ ಪುಸ್ತಕವನ್ನು ಮನೆಗೆ ತಲುಪಿಸಿದ ತಮ್ಮಣ್ಣ ಬೀಗಾರ ಅವರು ಸಾಂಪ್ರದಾಯಕ ಚೌಕಟ್ಟನ್ನು ಮರಿದು ಸೊಗಸಾದ ಮಕ್ಕಳ ಕತೆ ಕಟ್ಟುವುದರಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡವರು.ಮತ್ತು ಇದರಲ್ಲಿ ಯಶಸ್ಸನ್ನು ಕಂಡವರು. ನೀತಿಯನ್ನು ಹೇಳುವುದೇ ಮಕ್ಕಳ ಸಾಹಿತ್ಯವೆಂಬ ತುಂಬಾ ಬಾಲಿಶವಾದ ಹಾಗೂ ನೀರಸವಾದ ಬರವಣಿಗೆ ಕ್ರಮವನ್ನು ಅಲ್ಲಗಳೆದು ನೈಜತೆಯನ್ನು ಅಚ್ಚುಕಟ್ಟಾಗಿ ಸೆರೆಹಿಡಿಯಬಲ್ಲವರಾಗಿದ್ದಾರೆ. ಮತ್ತೊಂದು ಪುಸ್ತಕದ ನಿರೀಕ್ಷೆಯಲ್ಲಿ ಗಿರಿಗಿಟ್ಟಗೆ ಶುಭಕೋರುತ್ತೇನೆ. ಗಿರಿಗಿಟ್ಟಿ ಟೈಟಲ್ ಕತೆ ಅದ್ಭುತ ರಮ್ಯ ಸ್ವರೂಪದ್ದು ಅದನ್ನು ಓದುಗರು ಓದಿಯೇ ಆನಂದಿಸಬೇಕು. ಶುಭವಾಗಲಿ. *************************************** ವಿನಾಯಕ ಕಮತದ.

ಗಿರಗಿಟ್ಟಿ Read Post »

ಕಾವ್ಯಯಾನ

ಏಕಾಂತ… ಮೌನ…

ಕವಿತೆ ಏಕಾಂತ… ಮೌನ… ಡಾ.ಕಾತ್ಯಾಯಿನಿ ಕುಂಜಿಬೆಟ್ಟು ನಿನ್ನೆ ಆಗಸದಲ್ಲಿಇರುಳಿನ ಹೊಕ್ಕುಳಲ್ಲಿಅರಳಿದ್ದ ಹೂವು ಇಂದು ಬಾಡುತ್ತಿದೆ ಅದರ ಎಸಳುಗಳನ್ನುನಾಳೆ ಭೂಮಿಯಲ್ಲಿ ಹುಡುಕಬೇಕು… ಹುಣ್ಣಿಮೆ – ಅಮಾವಾಸ್ಯೆಗಳನಡುವೆ ಮನವನ್ನು ಸವರಿಕೊಂಡುಕರಗಿ ಹೋದ ಪರಿಮಳವನ್ನುಗಾಳಿಯಲ್ಲಿ ಅರಸಬೇಕುದೀಪ ಹುಡುಕುವ ಕುರುಡನಂತೆ ನಿನ್ನೆ ಚಂದಿರ ನನ್ನ ಕೈಯಏಕತಾರಿಯಾಗಿದ್ದನಾಳೆ ನಾನೇ ಬೆಂಕಿ ಉರಿವ ಮಡಕೆಯಾಗುತ್ತೇನೆ ಅವನ ಕೈಯಲ್ಲಿ.ನಾಳಿದ್ದು…!ಉಳಿಯುವುದು ಬರೇಏಕಾಂತ… ಮೌನ… ***************************

ಏಕಾಂತ… ಮೌನ… Read Post »

ಅನುವಾದ

ದ್ರೌಪದಿ ಶಸ್ತ್ರಧಾರಿಯಾಗು

ಅನುವಾದಿತ ಕವಿತೆ ದ್ರೌಪದಿ ಶಸ್ತ್ರಧಾರಿಯಾಗು ಕೆಲ ದಿನಗಳ ಹಿಂದೆ ಹಿಂದಿಯ ಹಾಸ್ಯ ನಟ ವೃಜೇಶ್ ಹೀರ್ಜಿ ಅವರು,  ತಮ್ಮ ಮಿತ್ರ  ಪುಷ್ಯಮಿತ್ರ ಉಪಾಧ್ಯಾಯ ಅವರ ಹಿಂದಿ ಕವಿತೆಯನ್ನು ಓದುವ ಒಂದು ವೀಡಿಯೋ ಫೇಸ್ ಬುಕ್ಕಿನಲ್ಲಿ ಕಾಣಿಸಿತ್ತು. ಅವರು ಭಾವಪೂರ್ಣವಾಗಿ ಓದಿದ್ದು ಅದನ್ನು ಪೂರ್ಣ ನೋಡುವಂತೆ ಮಾಡಿತು.  ಆ ಹಿಂದಿ ಕವಿತೆಯನ್ನು ನಾನು ಕನ್ನಡಕ್ಕೆ ಅನುವಾದಿಸಿದ್ದೇನೆ. ನೂತನ ದೋಶೆಟ್ಟಿ ಕೈಗೆ ಮದರಂಗಿ ಹಾಕುತ್ತ ಕೂರುವ ಸಮಯವಿದಲ್ಲನಿನ್ನನ್ನು ನೀನು ಸಂಭಾಳಿಸಿಕೊಳ್ಳಬೇಕಾದ ಕಾಲನೀನೇ ನಿನ್ನ ಹುರಿದುಂಬಿಸಿಕೊಹಾಸು ಹಾಕಿ ಶಕುನಿ ಹೊಂಚಿ ಕುಳಿತಿದ್ದಾನೆಎಲ್ಲ ತಲೆಗಳೂ ಬಿಕರಿಯಾಗುತ್ತವೆಕೇಳು ದ್ರೌಪದಿ , ಶಸ್ತ್ರಧಾರಿಯಾಗುಈಗ ಗೋವಿಂದ ಬರುವುದಿಲ್ಲ ಚದುರಿ ಚಿಂದಿಯಾಗಿರುವ ಈ ಸುದ್ದಿ ಪತ್ರಿಕೆಗಳಿಂದ.ಇನ್ನೂ ಎಷ್ಟು ಕಾಲ ನಿರುಕಿಸುವಿ?ಈ ದುಶ್ಯಾಸನರ ದರ್ಬಾರಿನಲ್ಲಿಎಂಥ ರಕ್ಷಣೆಯ ಅಹವಾಲು?ಈ ದುಶ್ಯಾಸನ ಕಡು ದುಷ್ಟಕಡು ಲಜ್ಜಾಹೀನನೂಅವನಿಂದ ನಿನ್ನ ಶ್ರೀರಕ್ಷೆಯೇ?ಕೇಳು ದ್ರೌಪದಿ , ಶಸ್ತ್ರಧಾರಿಯಾಗುಈಗ ಗೋವಿಂದ ಬರುವುದಿಲ್ಲ ನಿನ್ನೆಯ ತನಕ ಕುರುಡಾಗಿದ್ದ ರಾಜಈಗ ಮೂಗನೂ, ಕಿವುಡನೂಪ್ರಜೆಗಳ ತುಟಿಯನ್ನು ಹೊಲಿದಿದ್ದಾನೆಜೊತೆಗೆ ಕಿವಿಯ ಮೇಲೆ ಬಿಗಿ ಪಹರೆನಿನ್ನ ಈ ಕಣ್ಣೀರುಯಾರನ್ನು ತಾನೆ ಕರಗಿಸಬಲ್ಲುದು ?ಕೇಳು ದ್ರೌಪದಿ , ಶಸ್ತ್ರಧಾರಿಯಾಗುಈಗ ಗೋವಿಂದ ಬರುವುದಿಲ್ಲ. *************************

ದ್ರೌಪದಿ ಶಸ್ತ್ರಧಾರಿಯಾಗು Read Post »

ಕಾವ್ಯಯಾನ

ಜೀವನ ಜಲಧಿ

ಕವಿತೆ ಜೀವನ ಜಲಧಿ ವೃತ್ಯಾನುಪ್ರಾಸ ಕವನ ಶುಭಲಕ್ಷ್ಮಿ ಆರ್ ನಾಯಕ ಜೀವನವು ಜಂಜಡದ ಜಟಿಲ ಜಲಧಿಸಹನೆ ಸದಾಚಾರದಿ ಸಾಗು ಸಮಚಿತ್ತದಿಹೂವಂಥ ಹೊಂಗನಸ ಹೊತ್ತು ಹೃದಯದಿಮನಕೆ ಮಾಧುರ್ಯವೀವ ಮಾತೃ ಮಮತೆಯಲಿ// ಸುಖದುಃಖಗಳ ಸುಮನದಿ ಸ್ವೀಕರಿಸಿ ಸಾಗಲಿಬದುಕಿನ ಬವಣೆಗಳ ಬೇಗುದಿಯ ಬದಿಗಿಡುತನಮ್ರತೆಯಲಿ ನಗುನಗುತ ನಲುಮೆಯ ನೀಡುತಸನ್ನಡತೆಯಲಿ ಸಮಾಜಕ್ಕೆ ಸಂದೇಶ ಸಾರುತ// ಅತ್ಯಾಚಾರ ಅನಾಚಾರ ಅಂಧಕಾರವ ಅಳಿಸುವಹೆಣ್ಣುಗಳ ಹಿಂಸಿಸುವ ಹಮ್ಮೀರರ ಹತ್ತಿಕ್ಕುವಕಪಟ ಕಾಮಗಳಿಗೆ ಕಡಿವಾಣವ ಕಟ್ಟುವಮೋಸದ ಮಾಯೆಗೆ ಮದ್ದರೆದು ಮಣಿಸುವ// ನೋವು ನಲಿವುಗಳಿಗೆ ನಗುತ ನಮಿಸುವಬದುಕು ಬರಡಾದರೂ ಭರವಸೆಯಲಿ ಬದುಕುವಆತ್ಮವಿಶ್ವಾಸ ಆಶಾಭಾವದಲಿ ಆಡುತ ಆನಂದಿಸುವತಾಮಸವ ತೊಲಗಿಸಿ ತನ್ನರಿವಲಿ ತೇಲುವ// ****************************

ಜೀವನ ಜಲಧಿ Read Post »

ಕಾವ್ಯಯಾನ

ಹಚ್ಚಿಕೊಂಡರೆ

ಕವಿತೆ ಹಚ್ಚಿಕೊಂಡರೆ ನಿರ್ಮಲಾ ಶೆಟ್ಟರ ಸಾಕಿನ್ನು ಹೊರಡುಎನ್ನುವುದೆ ತಡ ಹೊರಡಲಾಗದು ಸರಿ ಇದ್ದುಬಿಡುಎಂದೊಡನೆ ಉಳಿಯಲಾಗದು ನಡೆಯುವ ಮುನ್ನ ನಿನ್ನೊಳಗಿನನನ್ನ ತೊರೆದು ನಡೆ ಎಂದೆನಲುಅದೆಷ್ಟು ಬಾರಿ ಅಂದುಕೊಂಡಿಲ್ಲತೊರೆಯಲಾಗದು ನನ್ನಒಳಗಿನ ನಿನ್ನ ಹೀಗೆ ಒಂದೊಮ್ಮೆ ಹಚ್ಚಿಕೊಂಡರೆರೆಕ್ಕೆ ಮೂಡಿ ನಿಂತ ಹಕ್ಕಿಮುನ್ನುಡಿ ತೀಡಿದ ಮೊದಲ ಪುಟತಾಯೊಡಲು ಸೀಳಿ ಬಂದ ಮೊಳಕೆ ಸಸಿಕಂಡಿಕೆ ಪೋಣಿಸಿಕೊಂಡ ಮಗ್ಗಎಲ್ಲದರಾಚೆ ಪ್ರೀತಿ ಕಾಪಿಟ್ಟುಕೊಂಡ ಹೃದಯ ನಡೆಯುವದು ಸರಳಾತೀ ಸರಳಅಲ್ಲಲ್ಲೆ ಚಾಚಿದ ಬೇರ ಕತ್ತರಿಸಿದಲ್ಲಿಚಿಗುರು ಆವರಿಸಿಕೊಂಡಂತೆ ಮಳೆಗೆಅಳಿದುಳಿದವು ತಮ್ಮಿರುವಿನ ಗುರುತಿನಲಿ ಭೂಮಿ ಬಸಿರ ಧಿಕ್ಕರಿಸಿದರೆಅತ್ತಂತೆ ಭಾನು ಮೋಡ ಸುರಿಸಿಮತ್ತೆ ಕನಸಿಗಾಗಿ ಕತ್ತಲೆ ಹಗಲಬಚ್ಚಿಟ್ಟಂತೆ ದಿನ ದಿನವೂ ಹಚ್ಚಿಕೊಂಡೆನೆಂದು ನೆಚ್ಚಿಕೊಳದ ನೋವುಬಾಳ ಯಂತ್ರಕೆ ಕೀಲೆಣ್ಣೆ ಕೊನೆತನಕರೆಕ್ಕೆಗಳೀಗ ಹಾರಲು ಹವಣಿಸಿವೆಆಗಸದ ಹೊಸ ಹಾದಿಗೆಅಣಿಗೊಂಡ ವಿದಾಯಕೊಂದು ನಗು ಸೇರಲಿನೀರಸವಾಗದಿರಲಿನಿನ್ನ ಹಾದಿ ಮತ್ತೆ ನನ್ನದೂ ********************************

ಹಚ್ಚಿಕೊಂಡರೆ Read Post »

ಅನುವಾದ

ಅನುವಾದ ಸಂಗಾತಿ

ಕನ್ನಡ ಮೂಲ: ಸ್ಮಿತಾ ಅಮೃತರಾಜ್ ಇಂಗ್ಲೀಷಿಗೆ: ಸಮತಾ ಆರ್. ಹಸಿ ಮಣ್ಣ ಧ್ಯಾನ. ಬಿದ್ದಿದ್ದಾರೆ ಪೈಪೋಟಿಗೆ ಎಲ್ಲರೂದುರ್ಬೀನು ಧರಿಸಿ ಹಸಿ ಮಣ್ಣ ಅರಸಿಗುದ್ದಲಿ ಪೂಜೆ ನಡೆಸಿ ಲೇಪಿಸುತ್ತಿದ್ದಾರೆ ಡಾಂಬರುಫೌಂಡೇಶನ್ ಕ್ರೀಂ ಹಚ್ಚುವಂತೆ. ಸಂಕಟ ಸುಲಭಕ್ಕೆ ದಕ್ಕುವ ಸಂಗತಿಯಲ್ಲವೀಗ.ಹಾರ ಬಯಸುವ ದೂಳ ಕಣಕಣದ ಚಡಪಡಿಕೆಗೆಎಷ್ಟು ಚಂದದ ಮಿರುಗು ಬಣ್ಣದ ಲೇಪ. ಏದುಸಿರು ಬಿಡುವಾಗ ಬಿರುಬಿಸಿಲಿನಲ್ಲಿ ರೂಪಾಂತರಗೊಂಡ ಪ್ರಾಣವಾಯುಹೇಳಿಕೊಡಲಾಗುತ್ತಿದೆ ಇಲ್ಲೀಗ ಎಳೆಯರಿಗೆಚಿತ್ರಕ್ಕೆ ಬಣ್ಣ ತುಂಬುವ ಪಾಠಫ್ಯಾನಿನ ಅಡಿಯಲ್ಲಿ ಕುಳ್ಳಿರಿಸಿ. ತಲೆಯೆತ್ತಿದೆ ವಿಶಾಲ ಸಭಾಂಗಣತೇವದ ಗುರುತೇ ಸಿಗದಂತೆ,ಕೆರೆಯ ಸಮಾಧಿಯ ಮೇಲೆ.ನಡೆಸುತ್ತಿದ್ದಾರೆ ಹಿರಿಯರುಶುಷ್ಕ ಸಮಾಲೋಚನೆ ಒಳಗೆ. ಮೋಡ ಬಿತ್ತನೆ, ನದಿ ತಿರುವುಗಹನ ಚರ್ಚೆಯ ಕಾವುಎಸಿಯ ಒಳಗೂ ಸುರಿವ ಬೆವರುಸೈ ಎನ್ನಲಾಗದ ತೀರ್ಮಾನಕ್ಕೆಮುಂದೂಡಲಾಗಿದೆ ಸಭೆ ನಾಳೆಗೂ. ಎಲ್ಲಿಂದಲೋ ತೂರಿಬಂದ ಹಿಡಿ ಬೀಜವೀಗಕಾದ ಟಾರು ರಸ್ತೆಯ ಮೇಲೆ ಬಿದ್ದುಪಟಪಟನೆ ಸಿಡಿದೇಳುತ್ತಿವೆತಾಳ್ಮೆಗೆಟ್ಟು. ಸಾವಿಗೆ ಸೆಡ್ಡುಹೊಡೆದ ದೈತ್ಯ ಮಹಲುಗಳುದಿಟ್ಟಿಸುವಾಗ ಬಿಡುಗಣ್ಣಿನಿಂದನಾನಿಲ್ಲಿ ಧ್ಯಾನಿಸುತ್ತಿರುವೆತೊಂಡೆ, ಬೆಂಡೆ ,ಬಸಳೆಬೇರು ಸೋಕುವ ಹಸಿ ಮಣ್ಣ. ನಾನೀಗ ಉಮೇದಿಗೆ ಬಿದ್ದಿದ್ದೇನೆಹಸಿಮಣ್ಣು ಹಂಚುವುದಕ್ಕಾಗಿಇಲ್ಲಿಯ ಮಣ್ಣು ಅಲ್ಲಿಯ ಸಸಿಬೇರಿಳಿಸಿ ಬಿಟ್ಟ ಉಸಿರು.. ಪವಡಿಸಲಿ ಜಗದ ಜಗುಲಿಯಲ್ಲಿಪ್ರಭುವೇ. —- A yearning for some wet soil. Holding the binoculars,Everyone is competing hard,To search for a fistful of wet soil. Worshipping the spadeWork is inaugurated,As a foundation creamRoads are smeared with coal tar. Pain is not easily empathised now,How nice to overlayThese fidgeting dust particles,Who want to fly away,with glistening hues. The breath gets transformedWhile gasping for air in the hot sun.Here kids are taught to fill colours to the sketches ,sitting under a fan. .A capacious auditorium is erectedWithout the traces of any moistureOn the grave of a vast lake.Leaders are busy insideWith their dry speeches. Deep discussions on“Cloud seeding,linking rivers”Are heating up the air,Sweating even inside an ac room,When Conclusions are hard to findThe meeting is carried overDay after day.. A handful of seeds came flyingFrom nowhere and fell on theHot tar road,and unable to bearExploding aloud. When the immortal giant mansionsAre staring with eyes wide open,I am yearning for some fresh wet soilTo root my greens,gourds and creepers. One of my apartment friendsCalled me up forAn urgent supply ofSome fresh wet soil,For a potted Tulasi plant. Now I am all eagerTo distribute the wet soil.Soil from here ,will root deepThe plant over thereand let the breath out.. And let the Lord restOn the stage of the world. *******************************

ಅನುವಾದ ಸಂಗಾತಿ Read Post »

You cannot copy content of this page

Scroll to Top