ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಸಂತೆಯಲ್ಲಿ ನಿಂತ ಅವಳು

ಲೇಖನ ಸಂತೆಯಲ್ಲಿ ನಿಂತ ಅವಳು (ಮಹಿಳಾ ಜಾಹಿರಾತು) ಸಂತೆಯಲ್ಲಿ ನಿಂತ ಅವಳು (ಮಹಿಳಾ ಜಾಹಿರಾತು) ಸಂತೆಯಲ್ಲಿ ನಿಂತ ಅವಳು (ಮಹಿಳಾ ಜಾಹಿರಾತು)             ಪ್ರಾಚೀನ ಕಾಲದಿಂದ ಇಂದಿನವರೆಗೂ ಮಾರುಕಟ್ಟೆಗೆ ಒಂದು ಆರೋಗ್ಯಕರವಾದ ನೀತಿ ಸಂಹಿತೆಯನ್ನು ರೂಪಿಸುವ ವಿವೇಕ ಮತ್ತು ವ್ಯವಧಾನ ಸಾಮುದಾಯಿಕ ಜವಾಬ್ದಾರಿಯಾಗಿ ಯಾವ ಕಾಲದಲ್ಲಿ ಯಾರಲ್ಲಿಯೂ ಕಾಣಿಸಿಕೊಂಡಿಲ್ಲ. ಆರೋಗ್ಯಕರ ಸಮಾಜಕ್ಕೆ ಲಾಭಗಳಿಕೆಯ ವ್ಯವಹಾರಿಕತೆಯನ್ನು ನಿಯಂತ್ರಿಸುವ ಶಕ್ತಿಯಿಲ್ಲದಿದ್ದರೆ ಇಡೀ ವ್ಯವಸ್ಥೆಯೇ ನರಳಬೇಕಾಗುತ್ತದೆ. ಮಾರುಕಟ್ಟೆ ಸಂಸ್ಕೃತಿ ಗಳಿಕೆಯ ತೂಗು ಕತ್ತಿಯನ್ನು ನಿರಂತರ ಗ್ರಾಹಕನ ಮೇಲೆ ಬೀಸುತ್ತಿರುತ್ತದೆ. ಇದರಿಂದ ವ್ಯಕ್ತಿ ಸಮಾಜಗಳು ಹಲವಾರು ಅಪಾಯಗಳಿಗೆ ಒಳಗಾಗಬೇಕಾಗುತ್ತದೆ.             ಭಾರತೀಯ ಸಮಾಜದಲ್ಲಿ ಹೆಣ್ಣನ್ನು ವ್ಯಕ್ತಿಯೆಂದು ಪರಿಗಣಿಸಿದ ಉದಾಹರಣೆಗಳಿಲ್ಲ. ಚರಿತ್ರೆಯುದ್ದಕ್ಕೂ ಹೆಣ್ಣನ್ನು ವಸ್ತು ಮುಖೇನವೆ ಗುರುತಿಸುವುದು ಯಾವ ಮಹಾತ್ಮರಿಗೂ ಅಪರಾಧವಾಗಿ ಕಾಣಿಸಿಲ್ಲ. ಗಂಡಸು ಸಂಪಾದಿಸಬಹುದಾದ ನಿರ್ಜೀವ ಭೌತಿಕ ವಸ್ತುವಿನಲ್ಲಿ ಹೆಣ್ಣನ್ನು ಪ್ರಭುತ್ವ ಮತ್ತು ಧರ್ಮ ಸತ್ತೆಗಳು ನಿರ್ಲಜ್ವವಾಗಿ ಸೇರಿಸಿಕೊಂಡು ಬಂದಿರುವ ಬಗ್ಗೆ ಯಾವ ಸಮಾಜ ಸುಧಾರಕನ ಸಂಕಟಕ್ಕೆ ನಿಲುಕದ ಹಾಗೇ ಉಳಿದಿದೆ.             ಸರಕು ಸಂಸ್ಕೃತಿಯ ವಿಶೇಷತೆ ಮತ್ತು ಹಿತ ಅಡಗಿರುವುದು ಹೆಣ್ಣನ್ನು ಬಳಸಿಕೊಳ್ಳುವ ವಿಧಾನದಲ್ಲಿ . ಸಾಮಾಜಿಕವಾಗಿ ಹೆಣ್ಣನ್ನು ಬದುಕಿನುದ್ದಕ್ಕೂ ಅನ್ಯರ ಹಂಗಿನಲ್ಲಿರುವ ಬೆಲೆಯುಳ್ಳ ಪ್ರಾಣಿ, ವಸ್ತುವಾಗಿಸಿರುವ ಸಾಮಾಜಿಕ ಬದುಕಿನ ಸಂರಚನೆಯಲ್ಲಿಯೇ ಅಫೀಮಿನಂತಹ ಧರ್ಮ ಮತ್ತು ಹಿಂಸಾವಾದದ ಪ್ರಭುತ್ವದ ಕೌರ್ಯ ಗಟ್ಟಿಗೊಂಡಿದೆ. ಇದನ್ನು ಅರ್ಥಮಾಡಿಕೊಳ್ಳುವುದರ ಮೂಲಕ ಸ್ತ್ರೀಯ ಬದುಕಿನ ಸಂಕಥನವನ್ನು ಕಟ್ಟಿಕೊಳ್ಳಲು ಸಾಧ್ಯ. ಮಾರುಕಟ್ಟೆಯಲ್ಲಿ ಮಹಿಳೆ ಕಳೆದು ಹೋಗುತ್ತಿರುವ ಸಂಗತಿ ನಮಗೇನೂ ಹೊಸ ಸಂಗತಿಯಲ್ಲ. ನಮ್ಮ ಪುರಾಣ ಪುಣ್ಯ ಪುರುಷರ ಬೆನ್ನ ಹಿಂದೆ, ಕಣ್ಣ ಮುಂದೆ, ಕಾಲ ಕೆಳಗೆ, ಕಾಲ ಮೇಲೆ ಹೆಣ್ಣನ್ನು ಇಟ್ಟುಕೊಂಡು ದಮನಿಸಿದ ಸಂಗತಿಗಳು ನಮ್ಮ ಸಾಮಾಜಿಕ ಮೌಲ್ಯಗಳೆಂದು ಧರ್ಮ ಮುದ್ರೆಯ ಮೂಲಕ ನಿರಂತರ ಭಕ್ತಿಪೂರ್ವಕವಾಗಿ ಪಠಿಸುವ ಪರಿಪಾಠ ಇಂದಿಗೂ ನಿಂತಿಲ್ಲ.             ಮಹಾಭಾರತದಲ್ಲಿ ಧರ್ಮರಾಯ ಕೈ ಹಿಡಿದ ಹೆಂಡತಿ ದ್ರೌಪದಿಯನ್ನು ಹಿರಿಯರ ಸಮ್ಮುಖದಲ್ಲಿ ಜೂಜಿನಲ್ಲಿ ಪಣಕ್ಕಿಟ್ಟು ಸೋಲುವುದರ ಮೂಲಕ ಧರ್ಮವನ್ನು  ಎತ್ತಿ ಹಿಡಿದ ಕಥೆಯನ್ನು ರಸವತ್ತಾಗಿ ಹೇಳುವ ಮುಂದೆ ದ್ರೌಪದಿಯ ಅಸಹಾಯಕತೆ ನೆನಪಾಗುವುದೇ ಇಲ್ಲ. ಸಪ್ತಪದಿ ತುಳಿದು ಸುಖ-ದುಃಖದಲ್ಲಿ ಸಮವಾಗಿರೆಂದು ಕೈ ಹಿಡಿದು ಬಂದ ಹೆಂಡತಿಯನ್ನು ತುಂಬಿದ ಸಭೆಯಲ್ಲಿ ನಿಲ್ಲಿಸಿ ಪಾತಿವ್ರತ್ಯ ಪರೀಕ್ಷಿಸುವ ರಾಮ ಮಹಾತ್ಮನೆಂದು ಕರೆಯಿಸಿಕೊಂಡಿದ್ದರ ಹಿಂದೆ ಸೀತೆಯ ದಯನೀಯತೆ ಮರೆತು ಹೋಗುತ್ತದೆ. ಸತ್ಯಕ್ಕಾಗಿ ಹರಿಶ್ಚಂದ್ರ ಹೆಂಡತಿಯನ್ನು ಮಾರುವಾಗ ಚಂದ್ರಮತಿ ಅನುಭವಿಸಿದ ಸಂಕಟದ ಅರಿವು ಯಾರ ಹೃದಯಕ್ಕೂ ತಟ್ಟುವುದಿಲ್ಲ. ಯಯಾತಿ ಮಹಾರಾಜ ತನ್ನ ಸ್ತ್ರೀಯರಿಗೆ ಹೆಸರುಳಿಸಿಕೊಳ್ಳುವ ಸಲುವಾಗಿ ದಾನವಾಗಿ ಕುದುರೆ ಕೇಳಿದ ಗಾವಲನಿಗೆ ಹೊಟ್ಟೆಯಲ್ಲಿ ಹುಟ್ಟಿದ ಮಗಳು ಮಾಧವಿಯನ್ನು ದಾನವಾಗಿ ನೀಡಿದ್ದು ಉಳಿದಿರುವುದೇ ಹೊರತು ಮಾಧವಿಯ ಛಿದ್ರಗೊಂಡ ಕನಸುಗಳು ಮರೆತು ಹೋಗಿವೆ.  ಗುರುವಿಗೆ ದಕ್ಷಿಣೆ ಕೊಟ್ಟು ಗುರು ಭಕ್ತಿಯನ್ನು ಮರೆಯುವ ಸಲುವಾಗಿ ಗಾಲವ ರಾಜರಿಂದ ರಾಜರಿಗೆ ಮಾಧವಿಯನ್ನು ಹೆತ್ತು ಕೊಡುವ ಯಂತ್ರದಂತೆ ಮಾರಿ ಕುದುರೆ ಪಡೆಯುತ್ತ ಹೋದ ಸಂಗತಿ ನಮಗೆ ಮಾರಿದ ದಾಖಲೆ ಕಡತಗಳಲ್ಲಿ ಮಿಂಚುತ್ತಿದೆ. ಇಂದಿಗೂ ಗಂಡಸಿನ ಅಹಮ್ಮಿಗೆ ಪೆಟ್ಟು ಬೀಳುವುದೆಲ್ಲ ಆತನ ಒಡೆತನದಲ್ಲಿರುವ ಹೆಂಗಸರನ್ನು ಕುರಿತು ಮಾತನಾಡಿದಾಗ ಮಾತ್ರ.             ನಮ್ಮ ಸುತ್ತ ಮುತ್ತಲೂ ನಡೆಯುತ್ತಿರುವ ಘಟನೆಗಳಿಗೆ ಒಂದಿಲ್ಲಾ ಒಂದು ರೀತಿಯಲ್ಲಿ ಹೆಣ್ಣನ್ನು ತಳುಕು ಹಾಕಲಾಗಿರುತ್ತದೆ. ಹೆಣ್ಣನ್ನು ಮಾರುವ, ಕೊಳ್ಳುವ, ಪಣಕ್ಕಿಡುವ, ಕದ್ದು ಪರಾರಿಯಾಗುವ ವಿಷಯಗಳೆಲ್ಲ ಮಾರುಕಟ್ಟೆಯ ಸಂಸ್ಕೃತಿಯ ಇನ್ನೊಂದು ರೂಪ. ಅಷ್ಟೇ ಅಲ್ಲ ಹೆಣ್ಣನ್ನು ನಿರ್ಜೀವ  ವಸ್ತುವಾಗಿ ಸಂಭೋದಿಸುವುದನ್ನು ಕಾಣಬಹುದು. ಇಂದಿಗೂ ಅದು, ಇದು ಎಂದೇ  ಕರೆಯಲಾಗುತ್ತದೆ. ಅಷ್ಟೇ ಅಲ್ಲ ಎತ್ತು ಕತ್ತೆಗಳನ್ನು ಓಡಿಸಿಕೊಂಡು ಹೋದರು ಎನ್ನುವಂತೆ ಹೆಣ್ಣನ್ನು ಓಡಿಸಿಕೊಂಡು ಹೋಗಲಾಯಿತೆಂದು ಕರೆಯುವುದನ್ನೆಲ್ಲ ನೋಡಿದಾಗ ಹೆಣ್ಣಿನ ಇರುವಿಕೆಯನ್ನು ಸಾಂಸ್ಕೃತಿಕವಾಗಿ ಹೇಗಿದೆಯೆಂಬುದನ್ನು ಮತ್ತೇ ಮತ್ತೇ ವೇದಪುರಾಣಗಳನ್ನು ಉದಾಹರಣೆಗೆ ಬಳಸಬೇಕಾಗಿಲ್ಲ.             ಇಂದು ಜಾಗತೀಕರಣ, ಖಾಸಗೀಕರಣ, ಉದಾರೀಕರಣ ಕಾರಣಗಳಿಂದ ಅಭಿವೃದ್ಧಿ ಶೀಲ ದೇಶಗಳು ತಮ್ಮ ಬಹುಮುಖ ಅಸ್ತಿತ್ವವನ್ನು ಕಳೆದುಕೊಳ್ಳುವ ಅಪಾಯದಲ್ಲಿವೆ. ವ್ಯಾಪಾರಿ ಉದ್ದೇಶದಿಂದ ಬರುವ ವ್ಯಕ್ತಿ ಸಂಗತಿಗಳೆಲ್ಲ ಬರಿ ಲಾಭದ ಮೇಲೆ ಕಣ್ಣಿಟ್ಟಿರುತ್ತವೆ. ಲಾಭ ಗಳಿಕೆಗಾಗಿ ಜೀವ ವಿರೋಧಿ ತಂತ್ರಗಳನ್ನೆಲ್ಲ ಯಥೇಚ್ಛವಾಗಿಯೇ ಬಳಸುತ್ತೇವೆ. ಐವತ್ತು ವರ್ಷದ ಹಿಂದೆ ಭಾರತಕ್ಕೆ ಕಾಲಿಟ್ಟ ಬ್ರಿಟಿಷರ ಕೈಯಲ್ಲಿ ತಕ್ಕಡಿ ಉದಾಹರಣೆಗೆ ಮಾತ್ರವಿತ್ತೆಂಬುದನ್ನು  ನೆನಪಿಸಿಕೊಳ್ಳಬೇಕಾಗಿದೆ. ಇಂದು ಮತ್ತೆ ಅದೇ ಅಪಾಯದಲ್ಲಿ ದೇಶ ಸಿಲುಕುತ್ತಿದೆ. ವ್ಯಕ್ತಿ ಹಿತಾಸಕ್ತಿಯ ರಾಜಕಾರಣಕ್ಕೆ ಯಾವುದೇ ತಾತ್ವಿಕ ಬದ್ಧತೆಯಿಲ್ಲದೆ ಇರುವುದರಿಂದ ಏನೆಲ್ಲ ಆಪತ್ತುಗಳನ್ನು ಆಹ್ವಾನಿಸಿದ್ದೇವೆ. ವಿಶ್ವ ವಾಣಿಜ್ಯ ನೀತಿಗೆ ಒಪ್ಪಿಗೆ ನೀಡುವಾಗ ನಮ್ಮ ದೇಶದ ಆರ್ಥಿಕ, ಸಾಮಾಜಿಕ ಹಿನ್ನೆಲೆಯಲ್ಲಿ ಅಸ್ತಿತ್ವಕ್ಕೆ ಧಕ್ಕೆ ಭವಿಷ್ಯತ್ತಿನಲ್ಲಿ ಬರಬಹುದೆಂಬ ಮುಂಜಾಗರೂಕತೆ, ಮುಂದಾಲೋಚನೆಗಳಿಲ್ಲದೆ ವಧಾಸ್ಥಾನಕ್ಕೆ ಬಂದು ನಿಂತಿರುವೆವು. ಬಹುರಾಷ್ಟ್ರೀಯ ಕಂಪನಿಗಳಿಗೆ ರತ್ನಗಂಬಳಿಯನ್ನು ಹಾಸಿ ನಡುಮನೆಗೆ ಕರೆದುಕೊಂಡಿದ್ದೇವೆ. ಹೀಗೆ ಬಂದವರಿಗೆ ನಮ್ಮ ಮನೆಯ ಹೆಂಗಸರಿಂದ ರಾಜೋಪಚಾರ ನೀಡಲು ಭ್ರಮೆ ಮತ್ತು ದುರಾಸೆಯ ಒತ್ತಡಗಳನ್ನು ಹೇರಿದ್ದೇವೆ.             ಈ ಜಾಗತೀಕರಣ ಪ್ರಕ್ರಿಯೆಯಿಂದ ಬಹುಸಂಖ್ಯಾತ ದುಡಿವ ವರ್ಗ ಮತ್ತು ಮಹಿಳೆಯರು ಅಗ್ಗದ ವಸ್ತುಗಳಾಗಿ ಬಳಕೆಗೊಳ್ಳುತ್ತಿರುವ ಶೋಚನೀಯ ವಾತಾವರಣ ದೇಶದುದ್ದಕ್ಕೂ ಕಾಣಿಸುತ್ತಿದೆ. ಧಾರ್ಮಿಕವಾಗಿಯೇ ಹೆಣ್ಣನ್ನು ಭೋಗಪ್ರದ ಜೀವವೆಂದು ಸಾರಿದ್ದಷ್ಟೇ ಅಲ್ಲ ಅದನ್ನು ಸಂಸ್ಕೃತಿಯಾಗಿಯೂ ಬೆಳಸಿಕೊಂಡು ಬರುತ್ತಿರುವೆವು. ಈ ಹಳೆಯ ಪುರಾಣ ಮೂಲದ ಸ್ತ್ರೀ ಮಾದರಿಗಳು ಇಂದು ಸಾಣೆ ಹಿಡಿಯಲ್ಲಿಟ್ಟು ಹೊಸ ರೂಪದಲ್ಲಿ ತಳಕು ಬಳುಕಿನಿಂದ ನಾವು ಕೊಳ್ಳುವ ವಸ್ತುಗಳಿಗೆ ಕಿರುನಗೆ ಬೀರಲು ನಿಂತಿರುವಳು. ಬಂಡವಾಳ ಹೂಡುವ ಬಹುರಾಷ್ಟ್ರೀಯ ಕಂಪನಿಗಳು ಮತ್ತು ಸ್ವದೇಶಿ ಬಂಡವಾಳ ಶಾಹಿಗಳು ರಾಷ್ಟ್ರದ ಆರ್ಥಿಕ ಸ್ವಾಯತ್ತತೆ, ಸಾವಲಂಬನೆಯ ನೆಲೆಗಳನ್ನು ಕ್ರಮೇಣ ನಿಷ್ಕ್ರಿಯಗೊಳಿಸುತ್ತಿವೆ. ಇದಕ್ಕಾಗಿ ರಾಜಕೀಯ ಅರಾಜಕತೆಯನ್ನು ಹುಟ್ಟು ಹಾಕುತ್ತದೆ. ಪ್ರಜ್ಞಾವಂತರ ಗಮನ ತನ್ನ ಮೇಲೆ ಬೀಳದಿರುವಂತೆ ಮತೀಯ ಭಯೋತ್ಪಾದಕತೆಯನ್ನು ಪ್ರಚೋದಿಸುತ್ತದೆ. ಜನ ಸಾಮಾನ್ಯರನ್ನೊಳಗೊಂಡ ಹಾಗೇ ಇಡೀ ಜನ ಸಮುದಾಯಗಳಲ್ಲಿ ಪರಸ್ಪರ ಸಂದೇಹ, ಅಪನಂಬುಗೆಯನ್ನುಂಟು ಮಾಡಿ ಆಂತರಿಕ ನೆಮ್ಮದಿಯನ್ನು ಕಿತ್ತುಕೊಳ್ಳತ್ತದೆ. ಇದಕ್ಕೆಲ್ಲ ಸ್ತ್ರೀಯನ್ನು ಒಂದಲ್ಲಾ ಒಂದು ರೀತಿಯಲ್ಲಿ ತಳುಕು ಹಾಕಿರುತ್ತದೆ.             ಇಲ್ಲಿಯ ಭೌದ್ಧಿಕ ಮತ್ತು ಭೌತಿಕ ಸಂಪತ್ತಿನ ಮೇಲೆ ಆಕ್ರಮಣಕಾರಿ ನೀತಿಯನ್ನು ಹೇರುತ್ತದೆ. ಮಹಿಳೆಯರಲ್ಲಿ ಉಪಭೋಗಪ್ರದವಾದ ಮನೋವೃತ್ತಿಯನ್ನು ಉದ್ದೀಪಿಸುತ್ತದೆ. ದುಡಿಯುವ ವರ್ಗದ ದುಡಿಯುವ ಅವಕಾಶಗಳನ್ನು ಯಂತ್ರಗಳ ಬಾಯಿಗೆ ಒಡ್ಡುತ್ತದೆ. ಹೀಗೆ ಆರ್ಥಿಕ ಅಸಹಾಯಕತೆಯಿಂದ ಬಳಲುವ ಜನವರ್ಗ ವ್ಯಾಪಾರಿ ತಂತ್ರಗಳಿಗೆ ಹೊಸ ಹೊಸ ರೂಪದಲ್ಲಿ ಬಲಿಯಾಗುತ್ತದೆ.             ಮುಂದುವರೆದ ದೇಶಗಳು ಉತ್ಪಾದಿಸುತ್ತಿರುವ ಕಾಂಡೋಂನಿಂದ ಹಿಡಿದು ಮಕ್ಕಳು ತಿನ್ನುವ ಚಾಕೋಲೇಟ್‌ನವರೆಗೂ ನಮ್ಮ ದೇಶದಲ್ಲಿ ಮಾರುಕಟ್ಟೆ ಕಳೆದುಕೊಂಡಿರುವ ಕಾರಣಕ್ಕಾಗಿ ಜಾಗತಿಕ ಮಾರುಕಟ್ಟೆಯನ್ನು ಮುಕ್ತವಾಗಿಟ್ಟಿದೆ. ಎಲ್ಲ ರೀತಿಯಿಂದಲೂ ಹಸಿದು ಕುಳಿತಿರುವ ಹಿಂದುಳಿದ ದೇಶಗಳು ದಿಢೀರನೆ ಈ ವ್ಯಾಪಾರಿ ಜಾಲಕ್ಕೆ ಬಿದ್ದು ದೇಶೀಯ ಸಾರ್ವಜನಿಕ ಉದ್ಯಮ ವ್ಯವಹಾರಗಳೆಲ್ಲ ಕುಸಿದು ಹೋಗಿವೆ. ಸರಕಾರಿ, ಸಾರ್ವಜನಿಕ ಉದ್ಯಮಗಳು ಕೃತಕ ನಷ್ಟದ ಕಾರಣಕ್ಕಾಗಿ ಶಾಶ್ವತವಾಗಿ ಬೀಗ ಜಡಿದು ಖಾಸಗಿಯವರ ಕೈಯಲ್ಲಿ ಬೀಗ ನೀಡುತ್ತಿರುವೆವು. ಇದರಿಂದ ಮಾರುಕಟ್ಟೆಯ ನೀತಿ ಹೇಗೆ ರೂಪಿಸಲ್ಪ ಡುತ್ತಿದೆಯೆಂದರೆ ‘ಅಕ್ಕನನ್ನು ತೆಗೆದುಕೊಂಡರೆ ತಂಗಿ ಫ್ರೀ’ ಎಂದು ರಸ್ತೆ ಬದಿಯಲ್ಲಿ ನಿಂತು ಕೂಗಿ ಕೂಗಿ ಕರೆಯುವಂತಾಗಿದೆ.             ಹೀಗೆ ಗ್ರಾಹಕನಲ್ಲಿ ಅಗ್ಗದರ ಮತ್ತು ಫ್ರೀ ಎನ್ನವುದರ ಆಮಿಷ ತೋರಿಸಿ ತನ್ನ ಉತ್ಪಾದನಾ ವಸ್ತುಗಳನ್ನು ಬಳಸುವಂತೆ ಮಾನಸಿಕ ರೋಗಕ್ಕೆ ಒಳಪಡಿಸಿದರೆ ಮುಗಿದೇ ಹೋಯಿತು. ಮಾನಸಿಕವಾಗಿ ಗುಲಾಮನಾದ ಗ್ರಾಹಕನನ್ನು ನಿರಂತರ ಶೋಷಿಸುವ ವಿಧಾನ ಬಂಡವಾಳಿಗರಿಗೆ ಚೆನ್ನಾಗಿ ತಿಳಿದಿರುತ್ತದೆ. ಹೀಗೆ ತಾನು ಉತ್ಪಾದಿಸಿದ ವಸ್ತುವಿಗೆ ಗ್ರಾಹಕನ ಮನೆಯ ಬಾಗಿಲನ್ನು ತಟ್ಟಲು ಅಗ್ಗದ ಕೂಲಿಯಲ್ಲಿ ಮಹಿಳೆಯರನ್ನು ದುಡಿಸಿಕೊಳ್ಳಲಾಗುತ್ತಿದೆ. ಏಕ ಕಾಲದಲ್ಲಿ ನಮ್ಮ ಮಹಿಳೆಯರು ಮತ್ತು ನಮ್ಮ ಗಂಡಸರ ಜೇಬಿನ ಭಾರ ಹಗುರವಾಗುವುದು. ಹೆಣ್ಣಿನ ಸೌಂದರ್ಯ ಬಹುಕಾಲದಿಂದ ಬಲಿಷ್ಠ ಗಂಡಸಿನ ಉಪಭೋಗಕ್ಕಾಗಿ ವೃದ್ಧಿಯಾಗುತ್ತಿತ್ತು. ಅದಕ್ಕಾಗಿಯೇ ಒಂದು ವರ್ಗದ ಹೆಣ್ಣನ್ನು ಸಿದ್ಧಗೊಳಿಸಲಾಗುತ್ತಿತ್ತು. ಇಂದು ಸಹ ವಿಶ್ವ ಮಾರುಕಟ್ಟೆಯಲ್ಲಿ ಒಂದು ವಸ್ತುವಿನ ಅಸ್ತಿತ್ವವನ್ನು ಸ್ಥಾಪಿಸಬೇಕಾದರೆ ಹೆಣ್ಣಿನ ಸೌಂದರ್ಯ ದೇಹವೊಂದು ಮುಖ್ಯ ಪಾತ್ರವಹಿಸುತ್ತದೆ. ಈ ಶತಮಾನದ ಅಂತ್ಯದಲ್ಲಿ ವಿಶ್ವ ಸುಂದರಿಯರ ಸ್ಪರ್ಧೆ ಗಲ್ಲಿ-ಗಲ್ಲಿಗಳಲ್ಲಿ ನಡೆಯುತ್ತಿದೆ. ಬಹು ಜನಪ್ರಿಯತೆಯನ್ನು ಗಳಿಸಿಕೊಂಡಿರುವ ವಿಶ್ವ ಸುಂದರಿ ಸ್ಪರ್ಧೆಯ ಹಿಂದೆ ಬಂಡವಾಳ ಶಾಹಿಗಳ ಕೈಗಳಿವೆ. ಸಾವಿರಾರು ವರ್ಷಗಳಿಂದ ಪುರಾಣಗಳ ಮೂಲಕ ನಮ್ಮ ನೆತ್ತಿಯ ಮೇಲೆ ಕುಣಿಯುತ್ತಿದ್ದ ಮೇನಕೆ, ತಿಲೋತ್ತಮೆ, ಊರ್ವಶಿಯರು ಪಾಯಿಖಾನೆಗಳನ್ನು ಬಿಡದೆ ಹಾಗೆ ಎಲ್ಲೆಂದರಲ್ಲಿ ತಳವೂರಿರುವರು. ಇಷ್ಟು ಶತಮಾನಗಳಲ್ಲಿ ಹುಟ್ಟಿದ ಸುಂದರಿಯರು ದಿಢೀರನೆ ಈ ಶತಮಾನದ ಅಂಚಿನಲ್ಲಿ ನಮ್ಮಂತಹ ದೇಶದಲ್ಲಿ ದಿಢೀರನೆ ಕಾಣಿಸಿಕೊಂಡಿರುವುದರ ಬಗ್ಗೆ ಅಶ್ಚರ್ಯಪಡುವುದೇನೂ ಇಲ್ಲ.             ಬೆಂಗಳೂರಿನಂತಹ ನಗರಗಳಲ್ಲಿ ಮಧ್ಯಮ ವರ್ಗದ ಜನ ಸಂಪತ್ತಿನ ಗಳಿಕೆಗಾಗಿ ಮನೆಯ ಮಕ್ಕಳನ್ನು ಅನಾರೋಗ್ಯದ ಚಟುವಟಿಕೆಗಳಿಗೆ ಪ್ರೇರೇಪಿಸುತ್ತಿರುವರು. ಸ್ಥಳೀಯ ವಸ್ತುವನ್ನು ಒಳಗೊಂಡ ಹಾಗೇ ವಿದೇಶ ಉತ್ಪಾದಿತ ವಸ್ತುಗಳಿಗೆ ಮಹಿಳೆಯರನ್ನು ರೂಪದರ್ಶಿಯರನ್ನಾಗಿ ಬಳಸಿಕೊಳ್ಳುವುದನ್ನು ಹೆಮ್ಮೆಯ ಸಂಗತಿ ಎಂದು ಕಾಣುತ್ತಿರುವೆವು.             ಜಾಹೀರಾತುಗಳಿಗೂ ವಸ್ತುಗಳಿಗೂ ಕಾರ್ಯಕಾರಣ ಸಂಬಂಧ ಏನೆಂಬುದನ್ನು ಕಾಣುತ್ತಿಲ್ಲ. ಮನೋ ವಿಕಾರಕ್ಕೆ ಆಸ್ಪದ ನೀಡುವ, ಸಾಮಾಜಿಕ ಸ್ವಾಸ್ಥ್ಯ ಕೆಡಿಸಬಹುದಾದ ಜಾಹೀರಾತುಗಳ ಮೇಲೆ ಕನಿಷ್ಠ ಪ್ರಮಾಣದ ನಿಯಂತ್ರಣ ಸಮಾಜ ಮತ್ತು ಸರಕಾರಕ್ಕಿಲ್ಲದಾಗಿದೆ. ದುಡಿಯುವ ವರ್ಗದ ಬದುಕಿನ ಸಂದೇಶದ ಮೇಲೆ ಜಾಹಿರಾತುಗಳು ದಾಳಿಗಿಳಿದಿವೆ. ನಮ್ಮ ದೇಶೀ ಪಾರಂಪರಿಕ ನಂಬಿಕೆ ಮತ್ತು ಸಂಸ್ಕೃತಿಯನ್ನು ಕ್ರಮೇಣ ವಿನಾಶಗೊಳಿಸುವ ಎಲ್ಲ ಹುನ್ನಾರಗಳು ಈ ಜಾಹಿರಾತುಗಳ ಮೂಲಕ ನಮ್ಮ ಮನೆ ಮನೆಯ ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತಿರುವುದರ ಕಡೆ ನಮ್ಮ ಗಮನ ಕೇಂದ್ರಿಕರಿಸಬೇಕಾಗಿದೆ. ಉದಾಹರಣೆಗೆ: ನಮ್ಮ ಕೌಟುಂಬಿಕ ಬದುಕಿನ ಸೌಹಾರ್ದ ಸಂಬಂಧದ ಪ್ರತೀಕವಾಗಿದ್ದ ಮನೆಗೆ ಬಂದವರ ಬಾಯಾರಿಕೆ ನೀರು ಕೊಡುವ ಸ್ಥಾನದಲ್ಲಿ ಚಹಾ, ಕಾಫಿಗಳು ಹಲವು ವರ್ಷಗಳ ಅಧಿಪತ್ಯ ಸ್ಥಾಪಿಸಿದ್ದವು. ಇಂದು ಅದರ ಸ್ಥಾನದಲ್ಲಿ ಕೊಕೋ ಕೋಲಾ, ಪೆಪ್ಸಿ, ಸೆವೆನ್ ಅಫ್, ಲಿಮ್ಕಾ ಮಿಂಚುತ್ತಿವೆ. ಅದು ಹೇಗೆಂದರೆ ನಮ್ಮ ರೂಪದರ್ಶಿಯರನ್ನು ಜನಪ್ರಿಯ ನಟ-ನಟಿಯರನ್ನು ಬಳಸಿಕೊಂಡು ಮಾಡುತ್ತಿರುವ ಜಾಹಿರಾತು ಇಡೀ ನಮ್ಮ ಕೃಷಿ ಸಂಸ್ಕೃತಿಯನ್ನೆ ನಾಶ ಮಾಡುವಂತಿದೆ. ಹೊಲಕ್ಕೆ ಹೋಗಿ ಬಾಯಾರಿದೆ ಎಂದು ಯಾರಾದರೂ ಕೇಳಿದರೆ ಬಾವಿಯ ನೀರನ್ನು ಸೇದಿ ಬಾಯಾರಿಕೆಯನ್ನು ನೀಗುವ ನಮ್ಮ ಮಾನವ ಸಹಜತೆಯೇ ಮರೆಯಾಗಿ ಅದರ ಸ್ಥಾನದಲ್ಲಿ ಒಬ್ಬ ನಟನು ರೈತರ ವೇಷದಲ್ಲಿ ಬಂದು ಬಾವಿಯಿಂದ ಸೇದಿ ನೀರು ಕೇಳಿದ ಬೆಡಗಿಯರಿಗೆ ನೀಡುವುದೇನೆಂದರೆ ಪೆಪ್ಸಿ, ಕೊಕೋ ಕೋಲಾದ ಬಾಟಲಿಗಳನ್ನು. ಅಷ್ಟೇ ಅಲ್ಲ ಆ ಬೆಡಗಿಯರು ಅದನ್ನು ಕುಡಿದು ಆತನಿಗೆ ಮುತ್ತಿಕ್ಕಿ ಮೂರ್ಛೆ ಗೊಳಿಸುವುದು. ಇದು ಏಕಕಾಲದಲ್ಲಿ ನಮ್ಮ ನೆಲದ ಸಂಸ್ಕೃತಿಯನ್ನು ನಮ್ಮ ಮನೆಯ ಹೆಣ್ಣು ಮಕ್ಕಳನ್ನು ಮುಂದಿಟ್ಟೆ ಮಾಡುವುದು. ಹೀಗೆ ಮಾರುಕಟ್ಟೆಯ ಸಂಸ್ಕೃತಿ ತಮ್ಮ ಪಾರಂಪರಿಕ ನಂಬಿಕೆ, ನಡತೆ, ವಿಚಾರಗಳನ್ನು ಕ್ರಮೇಣ ನಾಶಗೊಳಿಸುವುದು. ಇಂತಹದ್ದನ್ನು ದಿನ-ದಿನವು ನೋಡುವ ಮಕ್ಕಳು ಬಾವಿಯಲ್ಲಿ ತೆಂಗಿನ ಕಾಯಿಗಳಲ್ಲಿ ಬಾಯಾರಿಕೆಗೆ ನೀರಿರುವುದು ಎಂಬುದನ್ನು ಮರೆತು ಬಾಯಾರಿಕೆ ಎಂದರೆ ಕೊಕೋ ಕೋಲಾ, ಪೆಪ್ಸಿ, ಸೆವೆನ್ ಅಪ್ ಎಂದು ಭಾವಿಸುವ ಅಪಾಯಗಳು ನಮ್ಮೆದುರಿಗಿದೆ ನಮ್ಮ ಸಾಮಾಜಿಕ ಪಿಡುಗಾದ ವರದಕ್ಷಿಣೆ, ವರೋಪಚಾರಗಳ ಬಗ್ಗೆ ಕಾನೂನು ಬದ್ಧವಾಗಿ ತಡೆಯುವ ಕ್ರಮವನ್ನು ಬಿಗಿಗೊಳಿಸುವಷ್ಟರಲ್ಲಿಯೇ ಅದು ನುಣುಚಿಕೊಂಡು ಹೊಸ ರೂಪದಲ್ಲಿ ಯುವ ಜನತೆಯ ಮನಸ್ಸಿನಲ್ಲಿ ಬೇರೂರಿದೆ. ಸಾಂಪ್ರದಾಯಿಕವಾಗಿ ಮದುವೆಯಲ್ಲಿ ಸ್ಥಿತಿವಂತರು ವರನನ್ನು ಎದುರುಗೊಳ್ಳಲು, ಬೀಳ್ಕೊಡಲು ಕುದುರೆ, ಎತ್ತಿನಬಂಡಿ, ಟಾಂಗಾ, ತೆರೆದ ಜೀಪುಗಳನ್ನು ಬಳಸಿ ತಮ್ಮ ಸಂತೋಷ, ಸಂಭ್ರಮ ಯೋಗ್ಯತೆ, ಅಂತಸ್ತುಗಳನ್ನು ಪ್ರದರ್ಶಿಸುತ್ತಿದ್ದರು. ಇಂದು ಕುದುರೆಗಾಡಿ, ಎತ್ತಿನ ಬಂಡಿಯ ಸ್ಥಾನದಲ್ಲಿ ಹೀರೋ

ಸಂತೆಯಲ್ಲಿ ನಿಂತ ಅವಳು Read Post »

ಕಾವ್ಯಯಾನ

ಕತ್ತಲಿನಲಿ ನ್ಯಾಯ

ಕವಿತೆ ಕತ್ತಲಿನಲಿ ನ್ಯಾಯ ಸಾಯಬಣ್ಣ ಮಾದರ ಎಳೆಯ ಬಾರದೆಕ್ಕೆಅವರ ಕರಳು ಬಳ್ಳಿಗಳನ್ನುಕ್ರೀಯಗೆ ಪ್ರತಿಕ್ರೀಯೇ ?ಆಗುವದ್ಯಾವಾಗಿನ್ನುಎಷ್ಟು ದಿನವಂತೆಕೂಗುವಿರಿ ದಿಕ್ಕಾರಮೇಲಿನವರ ಕುರ್ಚಿಗಳಿಗೆಕಿವಿ ಕುರುಡಮನಿಷಾಗೆ ಸಿಗುವುದೇಕತ್ತಲಿನಲ್ಲಿರುವನ್ಯಾಯ ಬೆಳಕು !! ಜೋಳದ ಹೊಲದ ದಂಟುಗಳೆಕಣ್ಣೀರುಗೈದವುಯೋನಿಯಿಂದರಿದ ರಕ್ತಮಡುಗಟ್ಟಿತ್ತಲಕೂಗಲು ಬಾರದಂತೆನಾಲಿಗೆ ಸೀಳಿಅಟ್ಟಹಾಸ ಗೈದರಲ್ಲಸಬಲರುಆಗಬೇಕಲ್ಲವೇ ಅವರಿಗೂಆ ನೋವು ಜಾತಿ ಬಲವಿದ್ದರೆಮಾಡುವರು ಎನ್ಕೌಂಟರ್ಸುಡುವರು ದಮನಿತರನ್ನುನಡುರಾತ್ರೀ ಹಗಲು !! ನಾಟ್ಯದವರು ಬಸಿರಾದರುದೇಶದ ದೊರೆಕುಣಿದಾಡುವನು ಹಿರಿ ಹಿರಿ ಹಿಗ್ಗಿಬೆನ್ನು ಮೂಳೆ ಮುರಿದುಯೋನಿ ಹರಿದರುಇವರಿಗೆಕನಿಕರಿಸದವನು !! ಭಯಭರವಸೆ ಕಳೆದುಕೊಂಡರೆಹಾವೇ ಹಗ್ಗಭಯ ಬುಗ್ಗೆಯಚಿಲುಮೆ ಹುಟ್ಟಿಸಿನ್ಯಾಯ ದೀಪಕ್ಕೆಬತ್ತಿ ಹತ್ತಿಸಿಕಣ್ಣಿಗೆ ಕಣ್ಣು ಕಳೆಯಲುಸಿದ್ದರಾಗ ಬೇಕಲ್ಲವೆನಾವು !! *********************************

ಕತ್ತಲಿನಲಿ ನ್ಯಾಯ Read Post »

ಇತರೆ, ಲಹರಿ

ಪಾರ್ವತಿಯ ಖುಷಿ ಪ್ರತೀ ಹೆಣ್ಣಿಗೂ ಸಿಗಲಿ

ಲಹರಿ ಪಾರ್ವತಿಯ ಖುಷಿ ಪ್ರತೀ ಹೆಣ್ಣಿಗೂ ಸಿಗಲಿ ಸ್ಮಿತಾ ಭಟ್ ತವರು ಎನ್ನುವದು ಮುಗಿಯಲಾರದ ಸೆಳೆತ ಮತ್ತದು ಹೆಣ್ಮಕ್ಕಳಿಗೆ ಮಾತ್ರ ಸೀಮಿತ. ತಲೆ ತಲಾಂತರಗಳಿಂದಲೂ ತವರು ಮತ್ತು ಹೆಣ್ಣು ಸಯಾಮಿಯಂತೆ ಬದುಕುತ್ತ ಬಂದಿದ್ದಾರೆ. ಹೆಣ್ಣಿನೊಳಗೆ ತವರಿನ ಸೆಳೆತ,ಪುಳಕ,ಅಪ್ಯಾಯ ಭಾವಗಳು ಶುರುವಾಗುವದೇ ಮದುವೆಯೆಂಬ ಬಂಧನದಲಿ,ಭಾವದಲಿ,ಸಿಲುಕಿ ತವರ ತೊರೆದು ಹೊರನಡೆದಾಗಲೇ. ಅಲ್ಲಿಯವರೆಗೆ ಸುಪ್ತವಾಗಿದ್ದ ನಯ ನಾಜೂಕಿನ ಭಾವನೆಗಳೆಲ್ಲ ಕಟ್ಟೆಯೊಡೆದು ಹೃದಯವನ್ನು ತಲ್ಲಣಗೊಳಿಸಿಬಿಡುತ್ತವೆ. ಎಂತಹ ಐಶಾರಾಮಿ ಗಂಡನಮನೆಯೇ ಸಿಗಲಿ ತವರಿನಿಂದ ಬರುವ ಪುಟ್ಟ ಉಡುಗೊರೆಗಾಗಿ  ಹೆಣ್ಣು ಕಾತರದಿಂದ ಕಾಯುತ್ತಾಳೆ. ತವರೂರಿನ ಹೆಸರು ಹೇಳಿ ಯಾರೇ ಬಂದರೂ ಮುಖದಭಾವಕ್ಕೆ ಬೇರೆಯದೇ ಕಳೆಗಟ್ಟುತ್ತದೆ. “ನಿನ್ನ ತವರು ಮನೆಗೆ ಹೋಗಿದ್ದೆ ತಂಗೀ” ನಿನ್ನ ಅಮ್ಮನಿಗೂ ಈತರದ್ದು ಎರಡು ಡಜನ್ ಬಳೆ ಕೊಟ್ಟು ಬಂದಿದ್ದೀನಿ, ಅನ್ನುವಾಗ ನನಗೂ ಅದೇ ಇರಲಿ ಎನ್ನುವ ಮಾತು ಅರಿವಿಲ್ಲದೆ ಬರುತ್ತದೆ. ಅಲ್ಲಿಂದ ಬರುವ ಕೆಲಸದ ಆಳುಗಳೇ ಇರಲಿ, ನೆಂಟರೇ ಇರಲಿ, ಹಿಂದೊಂದು ತವರೂರಿನ ಹೆಸರು ಸೇರಿಕೊಂಡರೆ ವಿಶೇಷ ಅಕ್ಕರೆ, ಹಾಗಂತ ಅದು ಬೇದ ಭಾವದ್ದಲ್ಲ. ರಕ್ತಗತವಾಗಿ ಬಂದದ್ದು.  ದಾರಿಯಲ್ಲಿ ತವರೂರಿಗೆ ಹೊರಟ ಬಸ್ಸಿನ ಬೋರ್ಡ ಕಂಡರೂ ಸಾಕು ಆ ಬಸ್ಸಿನ ಮೇಲೆ ಡ್ರೈವರ್ ನ ಮೇಲೆ ಎಲ್ಲ ಪ್ರೀತಿ ಉಕ್ಕತ್ತದೆ. ತುಪ್ಪ ಬಡಿಸುವಾಗ ತವರ ಸುದ್ದಿ ಕೇಳಿದರೆ ಎರಡ್ಹುಟ್ಟು ತುಪ್ಪ ಹೆಚ್ಚಿಗೆ ಬೀಳುವದು. ಎಂದು ಛೇಡಿಸುವಿಕೆಯಾದರೂ ಸತ್ಯವೇ, ಸ್ವಲ್ಪ ನಕ್ಕರೂ ,ಅಡುಗೆಯಲ್ಲಿ ವೀಶೇಷವಾದದನ್ನು ಸಜ್ಜು ಗೊಳಿಸುತ್ತಿದ್ದರೂ ಏನಿದು !!ಇಂದು ತವರಿಂದ ಏನಾದರೂ ವಿಶೇಷ ಸುದ್ದಿ ಇದೆಯಾ? ಯಾರಾದರೂ ಬರುತ್ತಿದ್ದಾರಾ? ಎಂದು ಕಾಲೆಳೆಯುವ ಪತಿರಾಯರಿಗೇನೂ ಕಡಿಮೆಯಿಲ್ಲ. ಆದರೆ ತಕರಾರು ಅದರದ್ದಲ್ಲ. ಇಷ್ಟೆಲ್ಲ ಬದುಕಿನ ಜೊತೆಗೇ ಅಂಟಿಕೊಂಡು ಬಂದಿರುವ ಭಾವವನ್ನು ಸಂಬಂಧವನ್ನು ಮದುವೆಯಾಗುತ್ತಿದ್ದಂತೆ ಬಿಡಲಾಗಲಿ ಆ ಭಾವದೊಳಗೆ ಬದಲಾವಣೆ ತಂದುಕೊಳ್ಳಲಾಗಲಿ ಸಾಧ್ಯವೇ!? ತವರು ಹೆಣ್ಣಿನ ಹಕ್ಕು ಮತ್ತು ಆಸ್ತೆಯ ವಿಷಯ. ತವರಿನ ಬಗ್ಗೆ ಸ್ವಲ್ಪವೇ ಸ್ವಲ್ಪ ಮೂಗು ಮುರಿದರೂ ಆಗುವ ಯಾತನೆ ಹೇಳತೀರದ್ದು.  ತವರು ನಗುತಿದ್ದರೆ,ಮನೆಯಾಕೆಯೂ  ನಗುತ್ತಿರುತ್ತಾಳೆ ಎನ್ನುವ ಅರಿವಿದ್ದೂ ಅಹಂಕಾರದಿಂದ ಅದೆಷ್ಟೋ ಗಂಡಸರು ಹೂಂಕರಿಸುವದನ್ನು ನೋಡಿದ್ದೇನೆ. ಸುಕಾ ಸುಮ್ಮನೇ ತವರ ದೂರುವುದು. ಅಪ್ಪ, ಅಮ್ಮ, ಅಣ್ಣ,ತಮ್ಮ ,ಯಾರೇ ಇದ್ದರೂ ಅವರಡೆಗೊಂದು ಅಸಡ್ಡೆಯ ಮಾತೊಗೆಯುವದು. ಗೊತ್ತಿದೆ ಬಿಡೆ ನಿನ್ನ ತವರು ಎನ್ನುವ ಅನಾಧರ. ಈಗೇನು ನಿನ್ನ ತವರಿನ ದೊಡ್ಡಸ್ತಿಕೆ,ಒಂದು  ನಯಾ ಪೈಸಾ ತಗೊಳ್ದೆ ನಿನ್ನ ಮದುವೆ ಮಾಡ್ಕೊಂಡು ಬಂದಿದ್ದೀನಿ. ಆಗ ಬಡತನವಿತ್ತು ಬಿಡು,ಈಗ ಹಬ್ಬಕ್ಕೆ ಏನು ಕೊಟ್ರೋ!? ಕರೆಯುವಲ್ಲಿ, ಕೇಳುವಲ್ಲಿ,ಹೇಳುವಲ್ಲಿ, ಕೊಂಚ ವ್ಯತ್ಯಾಸ ವಾದರೂ, ಕೃಷ್ಣ ಕದ್ದನೆಂದ ಶ್ಯಮಂತಕಮಣಿಯಂತೆ ಅಪವಾದ ಹೆಗಲೇರುತ್ತದೆ. ಹೇಗೆ ತೊರೆಯುವದು ಹೇಳಿ ತವರಿನ ಸೆಳೆತವ. ನೋವುಂಡು ನಗುವ ಮೂರ್ತಿಯನ್ನು ಮಾಡಿದ ಒಲವ. ಅಲ್ಲಿ ಮುಗಿಯದ ನಗುವಿದೆ, ಆಗಾದ ನೆನಪಿದೆ,ಅಪ್ಯಾಯ ಭಾವವಿದೆ, ತೀರದ ಬಂಧವಿದೆ. ನಿನಗೆ ನನಗಿಂತ ತವರೇ ಹೆಚ್ಚು ಎಂದು ಮೂದಲುಸುವಿಕೆಗಾದರೂ  ಒಂದು ಅರ್ಥ ಬೇಡವೇ? ಇಲ್ಲಿ ಹೆಚ್ಚು ಕಡಿಮೆ ಏನಿದೆ!?  ಜತನವಾಗಿ ಸಾಕಿದ ಪ್ರೀತಿಯನ್ನು ,ಜೀವವನ್ನೇ ಎರಡು ಭಾಗ ಮಾಡಿಕೊಟ್ಟ ವೇದನೆಯಲ್ಲಿ ಕೈ ಹಿಡುದು ಇನ್ನೊಂದು ಕೈಗೆ ಕೊಡುವಾಗ ಅಸಹಾಯಕ ತಂದೆ  ಕಣ್ಣೊಳಗೆ ಉಕ್ಕಿದ ಭಾವಕ್ಕೆ ವಿವರಣೆ ಕೊಡಲು ಸಾಧ್ಯವೇ? ತುಟಿ ಕಚ್ಚಿ ತಡೆದ ಅಮ್ಮನ ಕಣ್ಣ ಹನಿಗೆ ಋಣದ ಮಾತಾಡಲು ಸಾಧ್ಯವೇ? ಕೊಟ್ಟ ಹೆಣ್ಣು ಕುಲದ ಹೊರಗೆ ಎನ್ನುವುದಕ್ಕೆ ವಿವರಣೆ ಏನು ಕೊಟ್ಟು ಸಮರ್ಥಿಸುತ್ತಾರೋ ಅರಿಯೆ. ಆದರೆ ಎಂದಿಗೂ ಸಮ್ಮತವಲ್ಲದ ವಿಷಯ ಇದು ಹೆಣ್ಮನಸಿಗೆ. ಹಾಗೆ ನೋಡಿದರೆ ಗಂಡು ಕೂಡಾ ಹೆಣ್ಣು ಕೊಟ್ಟ ಮನೆಗೆ ಸದಾ ಋಣಿಯಾಗಿರಬೇಕು. ತವರಬಗ್ಗೆ ಸದಾ ತಕರಾರೆತ್ತುವ ಗಂಡನಮನೆಯಲ್ಲಿ ಹೆಣ್ಣು ತುಟಿ ಕಚ್ಚಿ ನಗುತ್ತಿರುತ್ತಾಳಷ್ಟೇ. ಗಂಡ ತನ್ನ ತವರನ್ನು ಗೌರವಿಸಲಿ. ಪ್ರೀತಿಸಲಿ,ಎನ್ನುವದು ಹೆಣ್ಣಿನ ಸಹಜ ಬಯಕೆ, ಗಂಡನಾದವ ಹೆಂಡತಿ ತನ್ನ ಮನೆಯವರನ್ನೆಲ್ಲ ಪ್ರೀತಿ ಆದರಗಳಿಂದ ಕಾಣಲಿ ಎಂದು  ಬಯಸುತ್ತಾನೋ  ಹಾಗೇ,  ತನ್ನ ಅಕ್ಕ ತಂಗಿಯರು ತವರನ್ನು ಪ್ರೀತಿಸುವದರ ಬಗ್ಗೆ ಖುಷಿ ಪಡುವವ, ತನ್ನ ಹೆಂಡತಿ ತವರನ್ನು ಪ್ರೀತಿಸತೊಡಗಿದರೆ ಸಿಡಿದೇಳುವ ವರ್ತನೆಗೆ ಅರ್ಥವುಂಟೇ!? ಅದೇನೆ ಹೊಂದಾಣಿಕೆಯ ಕೊರತೆ ಇದ್ದರೂ ತವರಿನೆಡೆಗಿನ ಹೆಣ್ಮನಸಿನ ಭಾವ ಅರಿತ ಗಂಡಸಿನೊಳಗೆ ಹೆಚ್ಚು ಯಶಸ್ಸಿದೆ. ಅದೆಷ್ಟೇ ಸಂದಿಗ್ಧ ಪರಿಸ್ಥಿತಿಯಲ್ಲಿ ಕೂಡಾ ಗಂಡ ತನ್ನ ತವರನ್ನು ಪ್ರೀತಿಸುತ್ತಾನೆಂದರೆ, ಹೆಂಡತಿ ಗಂಡನ ಮನೆ ಕುರಿತು ತಕರಾರು ಎತ್ತುವದೇ ಇಲ್ಲ. ಎಲ್ಲಿ ತವರಿಗೆ ಬೆಲೆ ಇದೆಯೋ ಅಲ್ಲೇ ತನ್ನ ಅಸ್ತಿತ್ವ ಎನ್ನುವದನ್ನು ಅವಳು ಎಂದೋ ನಿರ್ಧರಿಸಿದ್ದಾಳೆ. ಅದು ಪ್ರಕೃತಿ ಮಾತೆ ಪಾರ್ವತಿದೇವಿಯಿಂದಲೇ ಒಲಿದು ಬಂದ ಬಳುವಳಿ ಹೆಣ್ಣಿಗೆ.  ಪರಮ ಅಹಂಕಾರಿ,ಕಠೋರ ಸ್ವರೂಪಿ ದಕ್ಷ , ಶಿವನನ್ನು ಅವಮಾನಿಸಿದ ನಿದರ್ಶನಗಳಿಗೆ ಲೆಕ್ಕವೇ ಇಲ್ಲ, ಆದರೆ ಶಿವ, ಅರ್ಧಾಂಗಿನಿಯಾದ ಸತಿಯ ತವರಿನ ಗೌರವದ ಬಗ್ಗೇಯೇ ಸದಾ ಯೋಚಿಸುತ್ತಿದ್ದ.ಮತ್ತಿ ಕಾಪಾಡುತ್ತಿದ್ದ. ಸಕಲ ಅವಮಾನಗಳನ್ನು ಸತಿಗಾಗಿ ಸಹಿಸಿದ. ಮನಸು ಮಾಡಿದರೆ ಪರಶಿವನಿಗೆ ದಕ್ಷನ ಅಹಂಕಾರ ಮುರಿಯುವುದು ಕ್ಷಣದ ಕೆಲಸವಾಗಿತ್ತು, ಅಪಾರವಾಗಿ ತಂದೆಯನ್ನು ಪ್ರೀತಿಸುವ ಸತಿಗೆ ಎಲ್ಲಿಯೂ ನೋವಾಗಬಾರದೆಂದು,ಅವಳ ಭಾವಕ್ಕೆ ಧಕ್ಕೆಯಾಗಬಾರದೆಂದು ನೊಂದ, ಬೆಂದ,ಪರಿತಪಿಸಿದ. ತಂದೆಯ ತಪ್ಪುಗಳು ಸತಿಗೆ ಅರಿವಾಗಲೆಂದು ವರುಷಗಳೇ ಕಾದ. ಕೊನೆಗೆ ತವರನ್ನೇ ತೊರೆಯಲು ನಿರ್ಧಸಿದ ಸತಿಯ ಕುರಿತು ಹೇಳುತ್ತಾನೆ. ಹೆಣ್ಮಕ್ಕಳಿಗೆ ತವರು ಎಂದರೆ ದೇಹದ ಉಸಿರು. ಅದನ್ನು ನೀನು ತೊರೆದು ಬದುಕಲಾಗದು. ನಿನ್ನ ಅಂತರಂಗದ ನೋವು ವೇದನೆ ನಾನು  ಸಹಿಸಲಾರೆ. ಅಲ್ಲದೇ ಉಸಿರು ತೊರೆದು ಬಂದ ನಿನ್ನ ದೇಹಕ್ಕೆ ಲಕ್ಷಣವಿರಲಾರದು. ತಂದೆಯನ್ನು ತಿದ್ದುವ ಪ್ರಯತ್ನಮಾಡುವದಾಗಿ ವಚನವನ್ನೂ ಕೊಡುತ್ತಾನೆ. ಇದೇ ಕಾರಣಕ್ಕಾಗಿ ಸತಿ ದೇಹತ್ಯಾಗವನ್ನೂ ಮಾಡುತ್ತಾಳೆ. ಶಿವ ತನ್ನ ಬದುಕಿನುದ್ದಕ್ಕೂ ಅರ್ಧಾಂಗಿನಿಯ ಮುಖಾಂತರ ತವರು ಮತ್ತು ಹೆಣ್ಣಿನ ಅವಿನಾಭಾವ ಸಂಬಂಧದ ಬಗ್ಗೆ ಹೇಳುತ್ತಲೇ ಬಂದಿದ್ದಾನೆ. ಪರ್ವತ ರಾಜನ ಮಗಳು ಪಾರ್ವತಿಯಾಗಿ ಶಿವನ ವರಿಸಿದಮೇಲೂ ತನ್ನ ಹಿಂದಿನ ಜನ್ಮದ ತಂದೆ ತಾಯಿಯಿದ್ದಲ್ಲಿ ಹೋಗಿ ಶಿವನ ಕೋಪಕ್ಕೆ ಬಲಿಯಾದ ದಕ್ಷನ ತಲೆಗೆ ಮೊದಲಿನ ರೂಪ ನೀಡಲು ಶಿವನನ್ನು ಕೇಳಿಕೊಳ್ಳುತ್ತಾಳೆ. ಆಗ ಶಿವ ಹೇಳುತ್ತಾನೆ. ನೋಡಿದೆಯಾ ದೇವೀ..  ಹೆಣ್ಮಕ್ಕಳ ಈ ಮನಸ್ಥಿತಿಯೇ ಸದಾ ತವರು ನಗುತ್ತಿರಲು ಸುಖವಾಗಿರಲು ಕಾರಣ. ಜಗತ್ತಿನ ಎಲ್ಲ ಹೆಣ್ಮಕ್ಕಳೂ ನಿನ್ನ ಗುಣವನ್ನೇ ಹೊಂದಲಿ ಎಂದು ವರ ನೀಡುತ್ತಾನೆ. ಶಿವನ ಹಾರೈಕೆಯ ಪರಿಣಾಮವೋ ಏನೋ ಪ್ರಕೃತಿಯ ಈ ಸ್ವರೂಪವೇ ಮುಂದುವರಿದು ಪ್ರತೀ ಹೆಣ್ಣು ಪಾರ್ವತಿಯೇ ಆಗಿದ್ದಾಳೆ. ಆದರೆ ಸಹನಾಮೂರ್ತಿ ಶಿವ ಯಾವ ಗಂಡಸಿನೊಳಗೂ ಇಲ್ಲವೇನೋ!? ಅಕಸ್ಮಾತ್ ಇದ್ದರೆ ಆ ಹೆಣ್ಣು ಪಾರ್ವತಿದೇವಿ ಯಷ್ಟೇ ಖುಷಿಯಾಗಿ ಬದುಕುತ್ತಿದ್ದಾಳೆ ಎಂದೇ ಅರ್ಥ.

ಪಾರ್ವತಿಯ ಖುಷಿ ಪ್ರತೀ ಹೆಣ್ಣಿಗೂ ಸಿಗಲಿ Read Post »

ಅಂಕಣ ಸಂಗಾತಿ, ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಒಂದು ಜೀವನ ಸಾಲದು ( ಆತ್ಮ ಕಥೆ) ಒಂದು ಜೀವನ ಸಾಲದು ( ಆತ್ಮ ಕಥೆ)ಮೂಲ : ಕುಲದೀಪ್ ನಯ್ಯರ್ಅನುವಾದ : ಆರ್. ಪೂರ್ಣಿಮಾಪ್ರ : ನವಕರ್ನಾಟಕ ಪಬ್ಲಿಕೇಷನ್ಸ್ಪ್ರಕಟಣೆಯ ವರ್ಷ :೨೦೧೮ಬೆಲೆ :ರೂ.೪೪೬ಪುಟಗಳು : ೫೯೨ ಇದು ಪ್ರಸಿದ್ಧ ಪತ್ರಕರ್ತ ಕುಲದೀಪ ನಯ್ಯರ್ ಅವರ ಆತ್ಮಕಥೆಯ ಅನುವಾದ.  ಸಾಕಷ್ಟು ದೀರ್ಘವಾಗಿರುವ ಈ ಕೃತಿಸ್ವಾತಂತ್ರ್ಯೋತ್ತರ.      ಭಾರತದಲ್ಲಿ ಘಟಿಸಿದ ಅನೇಕ ದುಃಖಕರ ಘಟನೆಗಳನ್ನು ನಿರೂಪಿಸುತ್ತದೆ.  ಹಾಗೆಯೇ  ಸ್ವಾತಂತ್ರ್ಯ   ಪೂರ್ವದಲ್ಲಿ ದೇಶವನ್ನು ವಿಭಜನೆಯತ್ತ ಕೊಂಡೊಯ್ದ ರಾಜಕೀಯ ಸನ್ನಿವೇಶಗಳನ್ನು ಕುರಿತೂ ಹೇಳುತ್ತದೆ. ಸಾಮಾನ್ಯ ಆತ್ಮಕಥೆಯಲ್ಲಿರುವಂತೆ ಇಲ್ಲಿ ನಿರೂಪಕನ ಅಂತರಂಗದ ನೋಟವಿಲ್ಲ. ಇದು ಪೂರ್ತಿಯಾಗಿ ಬಹಿರಂಗದ ಘಟನೆಗಳ ಚಿತ್ರಣ.  ಚರಿತ್ರೆಯ ಘಟನೆಗಳನ್ನು ಆಧರಿಸಿದ್ದು. ಆದ್ದರಿಂದ ಇಂದು ಪ್ರತಿಯೊಬ್ಬ ಭಾರತೀಯನೂ ಓದಲೇ ಬೇಕಾದ ಅತ್ಯಂತ ಪ್ರಸ್ತುತವಾದ ಸಮಕಾಲೀನ ಚರಿತ್ರಕೋಶವಿದು. ಸಿಯಾಲ್ ಕೋಟ್‌ನಲ್ಲಿ ಜನಿಸಿದ ಕುಲದೀಪ ನಯ್ಯರ್ ಮೊದಲು ವಕೀಲರಾಗ ಬಯಸಿದ್ದು,  ದೇಶವಿಭಜನೆಯ ನಂತರ ಭಾರತಕ್ಕೆ ಬಂದ ಬಗೆ, ದಾರಿಯುದ್ದಕ್ಕೂ ಧರ್ಮಾಂಧರಿಂದಾದ ನರಮೇಧವನ್ನು ಕಂಡದ್ದು, ಮುಂದೆ ತಾನು ಶಾಂತಿಗಾಗಿ ಶ್ರಮಿಸಬೇಕೆಂದು ನಿರ್ಧರಿಸಿದ್ದು, ಸಿಯಾಲ್ ಕೋಟನ್ನು ಬಿಟ್ಟು ಬಂದಾಗ ತಾನೊಂದು ವೈರಿ ದೇಶವನ್ನು ಬಿಟ್ಟು ಬರುತ್ತಿದ್ದೇನೆ ಎಂದು ಸ್ವಲ್ಪವೂ ಅನ್ನಿಸದಿದ್ದದ್ದು, ದೆಹಲಿಯಲ್ಲಿ ಒಂದು ಉರ್ದು  ಪತ್ರಿಕೆಯಲ್ಲಿ ವರದಿಗಾರರಾಗಿ ಸೇರಿದ್ದು,  ಗಾಂಧೀಜಿಯವರ ಹತ್ಯೆಯ ಕರಾಳ ಘಟನೆಯಿಂದ ಆಘಾತಗೊಂಡದ್ದು, ಇಂಡಿಯನ್ ಎಕ್ಸ್ ಪ್ರೆಸ್   ಪತ್ರಿಕೆಗೆ ಸೇರಿಕೊಂಡದ್ದು, ಲಾಲ್ ಬಹಾದ್ದೂರ ಶಾಸ್ತ್ರಿಯವರ ಮಾಧ್ಯಮ ಸಲಹೆಗಾರರಾಗಿದ್ದು,  ಪಾಕಿಸ್ಥಾನದೊಂದಿಗೆ ಶಾಂತಿ ಒಪ್ಪಂದಕ್ಕಾಗಿ ಶಾಸ್ತ್ರಿಯ    ವರೊಂದಿಗೆ ರಷ್ಯಾದ ತಾಷ್ಕೆಂಟಿಗೆ ಹೋಗಿದ್ದು, ತುರ್ತು ಪರಿಸ್ಥಿತಿಯಲ್ಲಿ ಇಂದಿರಾಗಾಂಧಿಯವರ ಸರ್ವಾಧಿಕಾರವನ್ನು ವಿರೋಧಿಸಿದ್ದು, ಸದಾ ವಾಕ್ ಸ್ವಾತöತ್ರ್ಯ ಮತ್ತು ಅಭಿಪ್ರಾಯ ಸ್ವಾತಂತ್ರ್ಯಗಳಿ ಗಾಗಿ ಹೋರಾಡಿದ್ದು, ಗಾಂಧಿವಾದಿಯಾಗಿ ರೈತರು, ದಲಿತರು , ಸ್ತ್ರೀಯರು ಮತ್ತು ಸಮಾಜದ ದಮನಿತ ವರ್ಗದವರ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಡಿದ್ದು- ಹೀಗೆ ತಮ್ಮ ವೈಯಕ್ತಿಕ ಬದುಕಿನೊಂದಿಗೆ ಬೆಸೆದುಕೊಂಡಿದ್ದ ನೂರಾರು ಸಾಮಾಜಿಕ ಹಾಗೂ ರಾಜಕೀಯ ಸಂಗತಿಗಳನ್ನು ಇಲ್ಲಿ ನಿರೂಪಿಸುತ್ತಾರೆ. ಆರ್.ಪೂರ್ಣಿಮಾ ಅವರ ಅನುವಾದದ ಭಾಷೆ ಸುಂದರವೂ ಸುಲಲಿತವೂ ಆಗಿದೆ. ಬಹಳ ದೀರ್ಘವಾದ ಒಂದು ಕಥನವಾದರೂ ಅನುವಾದಕಿ ಎಲ್ಲೂ ತಾಳ್ಮೆ ಕಳೆದುಕೊಳ್ಳದೆ ಏಕಪ್ರಕಾರದ ಸಮತೋಲನವನ್ನು ಕಾಯ್ದುಕೊಂಡದ್ದು ಅವರ ಅಪಾರ ಪರಿಶ್ರಮ-ಪ್ರತಿಭೆಗಳಿಗೆ ಸಾಕ್ಷಿಯಾಗಿ ನಿಲ್ಲುತ್ತದೆ. ಮುದ್ರಣದ ಗುಣಮಟ್ಟ, ರಕ್ಷಾಪುಟ, ಬಳಸಿದ ಕಾಗದ-ಹೀಗೆ ಎಲ್ಲ ದೃಷ್ಟಿಯಿಂದಲೂ ಪುಸ್ತಕದ ಬಾಹ್ಯ ನೋಟ ನೋಡುಗರ ಗಮನ ಸೆಳೆಯುತ್ತದೆ. ******************************************* ಡಾ.ಪಾರ್ವತಿ ಜಿ.ಐತಾಳ್ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನವನ್ನು ಸಾಹಿತ್ಯದಲ್ಲಿ ಪ್ರವೃತ್ತರಾಗಿ ಕಳೆಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಮತ್ತು ಮಲೆಯಾಳ ಭಾಷೆಗಳ ಮೇಲೆ ಹಿಡಿತ ಸಾಧಿಸಿರುವ ಇವರು ಈ ಎಲ್ಲ ಭಾಷೆಗಳ ನಡುವೆ ೪೦ಕ್ಕೂ ಹೆಚ್ಚು ಸಾಹಿತ್ಯಕ ಮೌಲ್ಯಗಳುಳ್ಳ ಕಾದಂಬರಿ, ಸಣ್ಣ ಕಥೆ, ನಾಟಕ, ವೈಚಾರಿಕ ಕೃತಿಗಳನ್ನು ಅನುವಾದಿಸಿದ್ದಾರೆ. ಸ್ವತಂತ್ರವಾಗಿಯೂ ಇಂಗ್ಲಿಷ್, ಕನ್ನಡ,ತುಳು ಮತ್ತು ಮಲೆಯಾಳಗಳಲ್ಲಿ ೨೭ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ಭಾಷಾ ಭಾರತಿಯಿಂದ ಶ್ರೇಷ್ಠ ಅನುವಾದಕಿ ಎಂಬ ನೆಲೆಯಲ್ಲಿ ಗೌರವ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯಶ್ರೀ ಪ್ರಶಸ್ತಿಯನ್ನೂ ಕೇರಳದಿಂದ ಕಾಳಿಯತ್ತ್ ದಾಮೋದರನ್ ಪ್ರಶಸ್ತಿಯನ್ನೂ ಪಡೆದಿದ್ದಾರೆ. A Comparative Study of the Fictional Writings of Shivaram Karanth and Thakazhi Shivashankara Pillai from a Feminist Perspective ಎಂಬ ಇವರ ಪಿ.ಹೆಚ್.ಡಿ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾ ನಿಲಯವು ಡಾಕ್ಟರೇಟ್ ಪದವಿ ನೀಡಿದೆ

Read Post »

ಕಾವ್ಯಯಾನ, ಗಝಲ್

ಮನಿಷಾಗೊಂದು ಗಝಲ್

ಮನಿಷಾಗೊಂದು ಗಝಲ್ ಅರುಣಾ ನರೇಂದ್ರ ನಾನಿಲ್ಲಿ ಮೂಕಳಾಗಿರಬೇಕು ಮಾತನಾಡಿದರೆ ನಾಲಿಗೆ ಕತ್ತರಿಸುತ್ತಾರೆನೀನಿಲ್ಲಿ ಜೀವಂತ ಶವವಾಗಿರಬೇಕು ಪ್ರತಿಭಟಿಸಿದರೆ ಗುಂಡಿ ತೋಡಿಸುತ್ತಾರೆ ರಾಮನಾಳಿದ ಈ ನೆಲದಲ್ಲಿ ನಾನು ಮತ್ತೆ ಹೆಣ್ಣಾಗಿ ಹುಟ್ಟಿದ್ದೇನೆ ಗೆಳತಿಹೊಸಿಲು ದಾಟಿ ಲಕ್ಷ್ಮಣ ರೇಖೆಯನ್ನೂ ದಾಟುತ್ತೇನೆಂದರೆ ವನವಾಸ ಕಳಿಸುತ್ತಾರೆ ನಿರ್ಭಯಾ ಮಧು ದಿಶಾ ಮತ್ತೆಲ್ಲರ ಆರ್ತನಾದ ಇನ್ನೂ ಕೇಳಿಸಿದರೂ ಮತ್ತೆ ಎಂಥ ನಿರ್ಲಕ್ಷ್ಯಇಂದು ಮನಿಶಾ ನಾಳೆ ನನ್ನ ಸರದಿ ಬೇಡವೆಂದರೆ ಮಸಣದ ಮನೆ ತೋರಿಸುತ್ತಾರೆ ಯುಗ ಯುಗಗಳು ಅಳಿದರೂ ಇನ್ನೆಷ್ಟು ಹೆಣ್ಣು ಬಲಿಯಾಗಬೇಕು ಇವರ ಕಾಮದ ತೀಟೆಗೆಅಂಗಾಂಗಗಳ ಹರಿದು ತಿನ್ನುವ ಹೃದಯ ಹೀನರು ಪ್ರಶ್ನಿಸಿದರೆ ಪ್ರಾಣ ತಗೆಯುತ್ತಾರೆ ಭದ್ರತೆ ಬೇಡಿದರೆ ಹೇಗೆ ಸಿಕ್ಕೀತು ಅರುಣಾಗೆ ಕಡತದಲ್ಲೇ ಕಾನೂನಿಗೆ ಕೈ ಕಾಲು ಕಟ್ಟಿದ್ದಾರೆಬೇಲಿ ಇಲ್ಲದ ಹೊಲವ ಗೂಳಿಯಂತೆ ತಿಂದು ಹೆಣ ಮಾಡಿ ಸುಟ್ಟು ಕತೆ ಮುಗಿಸುತ್ತಾರೆ ******************************

ಮನಿಷಾಗೊಂದು ಗಝಲ್ Read Post »

ಇತರೆ

ಶಾಂತಲಾ ಮಧು ಬಹುಮುಖ ಪ್ರತಿಭೆ

ಶಾಂತಲಾ ಮಧು ಬಹುಮುಖ ಪ್ರತಿಭೆ ಶಾಂತಲಾ ಮಧು ಅವರ ಪರಿಚಯ ಶಾಂತಲಾ ಮಧು ಅವರು ಅಂತಾರಾಷ್ಟ್ರೀಯ ಯೋಗ ಗುರುವಾಗಿ ಕೆಲಸ ಮಾಡುತ್ತಿದ್ದಾರೆ. ಉಸ್ತಾದ್ ಬಾಲೇಖಾನ್ ಶಿಷ್ಯೆಯಾಗಿ ಸಿತಾರ್ ವಾದನ ಕಲಿತಿದ್ದಾರೆ. ಬಯಲು ಕವನ ಸಂಕಲನ ಪ್ರಕಟಿಸಿದ್ದಾರೆ. ಚಿತ್ರಕಲಾವಿದೆ ಸಹ . ಏಕವ್ಯಕ್ತಿ ಪ್ರದರ್ಶನ ನೀಡಿದ್ದಾರೆ . ಪತಿ ಮಧು ಅವರು ಯಾರ್ಡ್ಲಿ ಸಂಸ್ಥೆಯ ಉಪಾಧ್ಯಕ್ಷರು. ಪುತ್ರಿ ರಶ್ಮಿ ಅವರು ವೈದ್ಯೆ . ಮಗ ಗೌತಮ್ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಶಾಂತಲಾ ಅವರು ಕನ್ನಡ ಸಾಹಿತ್ಯ ಸ್ನಾತಕೋತ್ತರ ಪದವೀಧರೆ . ಕುವೆಂಪು ವಿಶ್ವವಿದ್ಯಾನಿಲಯದ ಎಲ್. ಬಿ ಕಾಲೇಜಿನಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿರುವ ಇವರು ‘ಬಯಲು’ ಎಂಬ ಕವನ ಸಂಗ್ರಹವನ್ನು ಪ್ರಕಟಿಸಿದ್ದಾರೆ . ೨೦ ವರ್ಷಕ್ಕೂ ಮೇಲ್ಪಟ್ಟು ಯೋಗ ಗುರುಗಳಾಗಿ ಅನುಭವ ಹಾಗೂ ಭಾರತ ಮತ್ತು ಅಮೆರಿಕ ಸೇರಿದಂತೆ ಸಾವಿರಕ್ಕೂ ಹೆಚ್ಚು ಜನಕ್ಕೆ ಯೋಗ ಕಲಿಸಿದ್ದಾರೆ . ಭಾರತ ಸರ್ಕಾರ ಅನುಮೋದಿತ ರಾಷ್ಟ್ರಮಟ್ಟದ ಯೋಗ ಶಿಕ್ಷಕ ಪ್ರಮಾಣಪತ್ರ ಗಳಿಕೆ. ” ಶ್ರೀ ಯೋಗ ಸೆಂಟರ್” ನ ಡೈರೆಕ್ಟರ್__ ಹದಿನೈದು ವರ್ಷಗಳಿಂದ ಬಿಎಂ ವೇರ್ ನಲ್ಲಿ ಎಂಟು ವರ್ಷದಿಂದ ಯೋಗ ಶಿಕ್ಷಣ ನೀಡಿಕೆ . ಹಲವಾರು ಯೋಗ ಪ್ರಾತ್ಯಕ್ಷಿಕೆ ಮತ್ತು ಕಾರ್ಯಾಗಾರಗಳ ನಿರ್ವಹಣೆ . “ಮಿಸೆಸ್ ಇಂಡಿಯಾ ಮೈ ಐಡೆಂಟಿಟಿ” ೨೦೧೯ ರಲ್ಲಿ ಸಾಮಾಜಿಕ ಪ್ರಭಾವ …. ಕಿರೀಟ… ” ಸಮಾಧಾನ ಸಲಹಾ ಕೇಂದ್ರದಲ್ಲಿ ಪ್ರಮಾಣೀಕೃತ ಸಲಹೆಗಾರ್ತಿ ರಾಷ್ಟ್ರಮಟ್ಟದ ಚಿತ್ರಕಲೆಗಾರ್ತಿ ವಿಪಸ್ಯನಾ ಧ್ಯಾನ ಪರಿಣತೆ ಸಿತಾರ್ ವಾದ್ಯಗಾರ್ತಿ ಮತ್ತು ಕರ್ನಾಟಕ ಶಾಸ್ತ್ರೀಯ ಸಂಗೀತ ವಿದ್ಯಾರ್ಥಿನಿ . ವಿವರಗಳು ಶಾಂತಲಾ ಅವರು ಬಾಲ್ಯದಿಂದ ಹಠಯೋಗ ಅಭ್ಯಸಿಸುತ್ತಿದ್ದಾರೆ . ಶ್ರೀರಾಮಕೃಷ್ಣ ವಿದ್ಯಾಶಾಲೆಯಲ್ಲಿ ಯೋಗದಲ್ಲಿ ಪ್ರಾಥಮಿಕ ಶಿಕ್ಷಣ. ನಂತರ ಪುಣೆಯಲ್ಲಿ ಬಿ.ಕೆ.ಎಸ್ ಅಯ್ಯಂಗಾರ್ ಸಂಸ್ಥೆಯಲ್ಲಿ ಪರಿಣತ ಯೋಗಾಭ್ಯಾಸ . ಈಗ ಸುಮಾರು ಇಪ್ಪತ್ತು ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಯೋಗ ಶಿಕ್ಷಕಿಯಾಗಿ ಭಾರತ ಮತ್ತು ಅಮೆರಿಕದಲ್ಲಿ ಯೋಗ ಕಲಿಸುತ್ತಿದ್ದಾರೆ. ಏಷಿಯನ್ ಫೆಸ್ಟಿವಲ್ (ಓಹಿಯೋ ) A. T. & T ಬೆಲ್ ಲ್ಯಾಬ್ಸ್ (ಕೊಲಂಬಿಯಾ) ಭಾರತೀಯ ಸಾಂಸ್ಕೃತಿಕ ಉತ್ಸವಗಳು ಮುಂತಾದ ಅಮೆರಿಕದ ಪ್ರತಿಷ್ಠಿತ ಸಂಸ್ಥೆ ಸಮಾರಂಭಗಳಲ್ಲಿ ಯೋಗ ಪ್ರಾತ್ಯಕ್ಷಿಕೆಗಳನ್ನು ನೀಡಿದ್ದಾರೆ . ಭಾರತದಲ್ಲಿ ಪುಣೆ ಹೈದರಾಬಾದ್ ಮತ್ತು ಬೆಂಗಳೂರುಗಳಲ್ಲಿ ಪ್ರದರ್ಶನ ನೀಡಿದ್ದಾರೆ. ಬೆಂಗಳೂರಿನಲ್ಲಿ ೧೫ ವರ್ಷಗಳ ಹಿಂದೆ ಶ್ರೀ ಯೋಗ ಸೆಂಟರ್ ಸ್ಥಾಪಿಸಿದ್ದಾರೆ. ಅದರ ಮೂಲಕ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಯೋಗದ ಮೂಲಕ ಆರ್ಥೈಟಿಸ್ ಮಧುಮೇಹ ರಕ್ತದ ಒತ್ತಡ ಸಂತಾನಹೀನತೆ ಅಸಿಡಿಟಿ ಅಸ್ತಮಾ ಬೆನ್ನುನೋವು ತಲೆನೋವು ಮೈಗ್ರೇನ್ ಇನ್ನೂ ಮುಂತಾದ ಕಾಯಿಲೆಗಳಿಂದ ನರಳುವ ರೋಗಿಗಳಿಗೆ ಗುಣಮುಖರಾಗಲು ನೆರವು ನೀಡಿದ್ದಾರೆ. ಯೋಗ ಮತ್ತು ಒತ್ತಡ ನಿವಾರಣೆಯ ಕ್ರಮಗಳಾದ ಪ್ರಾಣಾಯಾಮ ಮತ್ತು ಧ್ಯಾನಗಳನ್ನು ವಿ.ಎಂ .ವೇರ್ ಮೊದಲಾದ ಸಾಫ್ಟ್ವೇರ್ ಕಂಪನಿಗಳಲ್ಲಿ ಬೋಧಿಸಿದ್ದಾರೆ. ಶಾಂತಲಾ ಅವರದು ಬಹುಮುಖ ಪ್ರತಿಭೆ. ಚಿಕ್ಕಂದಿನಿಂದಲೇ ಕಲೆಯ ಹಲವಾರು ಪ್ರಕಾರಗಳಲ್ಲಿ ಅವರಿಗೆ ಆಸಕ್ತಿ.ಚಿತ್ರಕಲೆಯ ಸಾಂಪ್ರದಾಯಿಕ ಶಿಕ್ಷಣವನ್ನು ಪ್ರತಿಷ್ಠಿತ ಸಂಸ್ಥೆ ಮತ್ತು ವ್ಯಕ್ತಿಗಳಲ್ಲಿ ಪಡೆದಿದ್ದಾರೆ . ಮಿ. ಕೂಪರ್ ಸ್ಕೂಲ್ ಆಫ್ ಆರ್ಟ್ಸ್ ಓಹಿಯೋ ಯುಎಸ್ಎ (ಲ್ಯಾಂಡ್ಸ್ಕೇಪ್ ಮತ್ತುಪೋರ್ಟ್ರೈಟ್) ಶ್ರೀಮತಿ ಕಾರ್ಲೆ ಪುಣೆ (ಮಿನಿಯೇಚರ್ ಮತ್ತು ಮೊಘಲ್ ಕಲೆ) ಮಿ. ಶಂಸುದ್ದೀನ್ (ಮ್ಯೂರಲ್)ತೈಲ ಚಿತ್ರ ಸೆರಾಮಿಕ್ ಪೆಂಟಿಂಗ್ ಮೊದಲಾದ ಪ್ರಕಾರಗಳಲ್ಲಿ ವಿಶೇಷ ಪರಿಣತಿ ಹೊಂದಿರುವ ಶಾಂತಲಾ ಅವರ ಕಲಾಕೃತಿಗಳು ಜಮ್ಮು ಕಾಶ್ಮೀರ ರಾಜಸ್ಥಾನ ಹೈದರಾಬಾದ್ (ಚಿತ್ರಮಯಿ ಆರ್ಟ್ ಗ್ಯಾಲರಿ) ಪಂಜಾಬ್ ಬೆಂಗಳೂರು (ಚಿತ್ರಕಲಾ ಪರಿಷತ್) ಮತ್ತು ಯುಎಸ್ಎ ನಲ್ಲಿನ ಪ್ರತಿಷ್ಠಿತ ಆರ್ಟ್ ಗ್ಯಾಲರಿಗಳಲ್ಲಿ ಪ್ರದರ್ಶಿತವಾಗಿದೆ ಶಾಂತಲಾ ಅವರಿಗೆ ಪ್ರಕೃತಿಯೇ ಸ್ಫೂರ್ತಿ. ಉದ್ಯಾನವನಗಳು ಸಮುದ್ರ ತೀರ ಹಾಗೂ ಕಾಡುಗಳಿಗೆ ಭೇಟಿ ಕೊಟ್ಟು ಅಲ್ಲಿನ ದೃಶ್ಯಗಳನ್ನು ಕ್ಯಾನ್ವಾಸ್ಗೆ ತರಲು ಇಷ್ಟಪಡುತ್ತಾರೆ. ದೇವನ ಸೃಷ್ಟಿಯದು ಅತ್ಯದ್ಭುತ ಹಾಗೂ ತಾನು ಅದನ್ನು ಚಿತ್ರಿಸುವುದು ಮೆಚ್ಚುಗೆಯ ಒಂದು ವಿನಯಶೀಲ ಪ್ರಯತ್ನ ಮಾತ್ರ ಎನ್ನುತ್ತಾರೆ. ಶಾಂತಲಾ ಅವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕಿ ಸಿತಾರ್ ವಾದನವನ್ನು ಧಾರವಾಡದ ಉಸ್ತಾದ್ ಬಾಲೆ ಖಾನ್ ಅವರ ಬಳಿ ಅಭ್ಯಸಿಸಿದ್ದಾರೆ . ಶಾಂತಲಾರವರೊಂದಿಗೆ ಸಂಗಾತಿ ಮಾತಾಡಿದಾಗ ಸಂಗಾತಿ-ನಮಸ್ಕಾರ,ಸಂಗೀತ,ಚಿತ್ರಕಲೆ,ಯೋಗ,ಸಾಹಿತ್ಯ ಈ ನಾಲ್ಕೂ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ನಿಮಗೆ ಮೂಲಸ್ಪೂರ್ತಿ ಯಾರು? ಮಲೆನಾಡಿನ ಮಗಳಾದ ನನಗೆ -ಪ್ರಕೃತಿ ಮೂಲ ಪ್ರೇರಣೆ ಮತ್ತು ಸ್ಪೂರ್ತಿ ಸಂಗಾತಿ -ಮೇಲಿನ ನಾಲ್ಕು ಕ್ಷೇತ್ರಗಳಲ್ಲಿನಿಮ್ಮ ಹೃದಯಕ್ಕೆ ಹತ್ತಿರವಾದದು ಯಾವುದು? ಯೋಗ ಮತ್ತು ಧ್ಯಾನ ಸಂಗಾತಿ-ಸದ್ಯ ಯಾವ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದೀರಿ? ೧ ಯೋಗ ( I am teaching also) ೨ ಚಿತ್ರಕಲೆ ( I am participating online exhibition s)೩ ಸಿತಾರ್ ೪ ಬರಹ . ಸಂಗಾತಿ-ಈಗ ನಿಮ್ಮ ಮುಂದಿರುವ ಹೊಸ ಯೋಜನೆಗಳೇನು? ನನ್ನ ಯೋಗ ಮತ್ತು Counselling ಕಲೆಯ ಮೂಲಕ ಇನ್ನು ಹೆಚ್ಚು ಸಮಾಜ ಸೆೇವೆಗೆ ನನ್ನನ್ನು ನಾನು ತೊಡಗಿಸಿ ಕೊಳ್ಳಬೇಕು೨ ಇನ್ನು ಹೆಚ್ಚು ಓದುವ ಮೂಲಕ ನನ್ನ ಬರಹ ಶಕ್ತಿ ಹೆಚ್ಚಿಸಿ ಕೊಳ್ಳಬೇಕುಕಥೆ ಬರೆಯುವ ಕನಸೂ ಇದೆ.೩ ಸಿತಾರ್ ಮತ್ತು ಚಿತ್ರಕಲೆ ಯ ಅಭ್ಯಾಸ ನಿದಾನವಾಗಿ ಸಾಗುತ್ತಲೆ ಬರುತ್ತಿದೆ. ಸಂಗಾತಿ-ಕೊನೆಯ ಪ್ರಶ್ನೆ ನಿಮ್ಮ ಸಾದನೆಗಳು ನಿಮಗೆ ತೃಪ್ತಿತಂದಿವೆಯಾ? ಇಲ್ಲ ಸಾರ್ಆದರೆ ಅದಕ್ಕಾಗಿ ಶೋಕಿಸುವುದು ಬಿಟ್ಟಿರುವೆ, ಕೆಲವೊಮ್ಮೆ ಅನ್ನಿಸುತ್ತದೆ ಯಾವುದಾದರು ಒಂದೇ ಕಲೆ ಯ ಪ್ರಕಾರ ಇಟ್ಟು ಕೊಳ್ಳ ಬೇಕಿತ್ತು ಸಾಧನೆಗೆ ಎಂದುಆದರೆ ನನಗೆ ಎಲ್ಲವೂ ಅತ್ಯಂತ ಪ್ರಿಯ ಅವು ನನ್ನ ಜೀವನ ಸಂಗಾತಿಗಳು ನಾನು Vipasana Meditation ಅಭ್ಯಾಸ ಮಾಡುತ್ತಿರುವೆ ‘ ಅನಿಚ್ಚ’ಎನ್ನುವುದು ನನ್ನ ಮಂತ್ರ ಈ ಕ್ಷಣದ ಬದುಕುಯನ್ನು ನಂಬುತ್ತೆನೆ, ಶಾಂತಲಾ ಮಧುರವರ ಚಿತ್ರಗಳು ಶಾಂತಲಾ ಮಧುರವರ ಪುಸ್ತಕ ************************************************************************

ಶಾಂತಲಾ ಮಧು ಬಹುಮುಖ ಪ್ರತಿಭೆ Read Post »

ಪುಸ್ತಕ ಸಂಗಾತಿ

ಹಿಮದೊಡಲ ಬೆಂಕಿ

ಪುಸ್ತಕ ಪರಿಚಯ ಹಿಮದೊಡಲ ಬೆಂಕಿ ಹಿಮದೊಡಲ ಬೆಂಕಿ.ಗಜ಼ಲ್ ಸಂಕಲನ.ಬೆಲೆ:- 80/-ಲೇಖಕರು :-ಅರುಣಾ ನರೇಂದ್ರಸಿದ್ಧಾರ್ಥ ಪ್ರಕಾಶನ ,ನಂದಿ ನಗರ , ಕೊಪ್ಪಳ. ಅರುಣಾ ನರೇಂದ್ರ ಅವರ ಹಿಮದೊಡಲ ಬೆಂಕಿ ಗಜ಼ಲ್ ಸಂಕಲನದ ಒಳಗೊಂದು ಸುತ್ತು… ಅರುಣಾ ನರೇಂದ್ರ ರವರು ಕೊಪ್ಪಳ ಜಿಲ್ಲೆಯವರಾಗಿದ್ದು ಈ ನಾಡಿನ ಹೆಸರಾಂತ ಮಹಿಳಾ ಸಾಹಿತಿಗಳಲ್ಲಿ ಇವರೂ ಒಬ್ಬರು. ಮುಖತಃ ನೋಡಿಲ್ಲದ, ಮಾತನಾಡಿಲ್ಲದ ಕೇವಲ ವಾಟ್ಸ್ ಆಪ್ ಗ್ರೂಪ್‌ನಿಂದಲೇ ಅಕ್ಷರಗಳ ಮುಖೇನ ಇವರೊಂದಿಗೆ ಅನುಸಂಧಾನ ಮಾಡುತ್ತಿರುವ ನಾನು ಇವರು  ಉದಯೋನ್ಮಖ ಬರಹಗಾರರ ಬರಹಗಳಿಗೆ ಮನಬಿಚ್ಚಿ ಬೆನ್ನುತಟ್ಟುವ ಕಾರ್ಯಕ್ಕೆ  ಮನಸೋತಿರುವೆ. ಸಹೋದರಿ ಸಮಾನರಾದ  ಇವರ ಈ ಹಿಮದೊಡಲ ಬೆಂಕಿ ವಿಭಿನ್ನ ದೃಷ್ಷಿಯ ಆರ್ದ್ರ ಸ್ವರೂಪದ ಗಜ಼ಲ್ ಸಂಕಲನಕ್ಕೆ ಭಾವ ತೀವ್ರತೆಯಿಂದ ನರಳಿಸುತ್ತಾ ಬದುಕು ಅರಳಿಸುವ ಗಜ಼ಲ್ ಗಳು ಎನ್ನುವ ಶಿರೋನಾಮೆಯನ್ನು ಹೊಳಪಿಸಿ ಗಜ಼ಲ್ ನ ಆಕೃತಿ ಮತ್ತು ಆತ್ಮಕ್ಕೆ ಜೀವ ದ್ರವ್ಯ ತುಂಬಿ ಮುನ್ನುಡಿ ಬರೆದ ಬಾಗಲಕೋಟೆ ಜಿಲ್ಲೆಯ ಖ್ಯಾತ ಹಿರಿಯ ಸಾಹಿತಿಗಳಾದ ಅಬ್ಬಾಸ್ ಮೇಲಿನಮನಿಯವರ   ಮುನ್ನುಡಿಯಿಂದ ಗಜ಼ಲ್ ನಾದ ಲೋಕದ ಜೀವ ತಂತಿಯಂತಿರುವ ಅರುಣಾ ನರೇಂದ್ರ  ರವರು ಕನ್ನಡ ಸಾಹಿತ್ಯ ಲೋಕದಲ್ಲಿ ಈಗಾಗಲೇ ರುಬಾಯಿ, ಹಾಯ್ಕು, ಕವನ, ತತ್ವಪದ,ನಾಟಕ ಕಲೆ  ಮುಂತಾದ ಹಲವಾರು ಪ್ರಕಾರಗಳಲ್ಲಿ ಪಳಗಿದ ಕೈ ಎಂಬುದು ತಿಳಿದು ಖುಷಿಯಾಯಿತು ; ಜೊತೆಗೆ ಈ ಸಂಕಲನ ಇವರ ಹದಿಮೂರನೇ ಕೃತಿ. ಇವರು ಕನ್ನಡ ಸಾಹಿತ್ಯದ ಕೃಷಿಯನ್ನು ಹೇಗೆ ಹದಗೊಳಿಸಿದ್ದಾರೆ ಎಂಬುದು ಇದರಿಂದಲೇ ತಿಳಿಯಬಹುದು . ಗಜ಼ಲ್ ಅರಬಿ ಶಬ್ದ ” ಹೆಂಗಸರೊಡನೆ ಮಾತನಾಡುವುದು, ಸಂಭಾಷಿಸುವುದು, ಪ್ರೇಮ, ಮೋಹ ಅನುರಾಗ ವ್ಯಕ್ತಪಡಿಸುವುದೆಂದು ಅರ್ಥ. ಪಾರಿಭಾಷಿಕವಾಗಿ ಹೇಳುವುದಾದರೆ ” ಹೃದಯದ ವೃತ್ತಾಂತ  ಮತ್ತು ಪ್ರೇಮ ಮೋಹಗಳ ವಿದ್ಯ ಮಾನಗಳ ಹೇಳಿಕೆ “ ಗಜ಼ಲ್ ಕಾವ್ಯಕ್ಕೆ ಇಂತಹುದೇ ವಿಷಯ ಎಂಬುದಿಲ್ಲ . ಪ್ರಾರಂಭದಲ್ಲಿ ಇದೊಂದು ಸಾಂಪ್ರದಾಯಿಕ ಕಾವ್ಯವಾಗಿತ್ತು. ಆದರೆ ಇತ್ತಿಗೆ ಎಲ್ಲಾ ವಿಷಯ ವಸ್ತುಗಳ ಮೇಲೂ,  ಸಾಮಾಜಿಕ ತಲ್ಲಣಗಳ ಮೇಲೂ,  ಪ್ರಕೃತಿ, ಆಧ್ಯಾತ್ಮಿಕ ,ಸ್ವಾತಂತ್ರ್ಯ ದ ಮೇಲೂ ಗಜ಼ಲ್ ರಚಿತವಾಗಿ ಜನ ಮನವನ್ನು ಹೆಚ್ಚು ಹೆಚ್ಚು ತಲುಪಿಸುವ ಕಾರ್ಯವಾಗುತ್ತಿದೆ. ಈ ಸಂಕಲನದಲ್ಲಿ ಒಟ್ಟು ೬೧ ಗಜ಼ಲ್ ಗಳಿವೆ. ಕಾವ್ಯ ಲೋಕದ ಅನುಭವಗಳಿಂದ ಪಕ್ವಗೊಂಡ ಜೀವ ಸಂವೇದನೆಗಳನ್ನು ಒಡಲೊಳಗೆ ಹುದುಗಿಸಿಕೊಂಡು ಮನುಷ್ಯ ಸಂಬಂಧಕ್ಕಾಗಿ ತುಡಿಯುವ ,ಮಾನವೀಯತೆಯ ಅಭಿವ್ಯಕ್ತಿಗೆ  ಧಾವಂತ ತೋರಿ ಆತ್ಮದ ಶೋಧನೆಗೆ ತೊಡಗಿಸಿಕೊಂಡ ಅನುಭಾವದ ನಿಜ ನೆಲೆಯನ್ನು ದರ್ಶಿಸುವ ವ್ಯಕ್ತಿ ಎಂದು ಈ ಗಜ಼ಲ್ಗಳ ಮಿಸ್ರಗಳಿಂದ ತಿಳಿಯಬಹುದು… ಮೇಲೆ ಚರ್ಮದ ಹೊದಿಕೆ , ದೇಹ ಎಲುಬಿನ ಗೂಡು ಬರಿ ಅಸ್ಥಿಪಂಜರ ನರಳಿ ನರಳಿ ಮಣ್ಣನಪ್ಪುವ ಮುನ್ನ ಎದೆಗೊಮ್ಮೆ ಬಂದು ಒದೆದು ಹೋಗು. ಗ.೧೧ ಬರಲಿ ಬೇನೆ ಬೇಸರಿಕೆಗಳ ಮಹಾಪೂರ ನಶ್ವರ ಸುಖ ನನಗೆ ಬೇಕಾಗಿಲ್ಲ ಕೈ ಸೋಲುವವರೆಗೂ ಹುಟ್ಟು ಹಾಕಿ ಬಾಳ ನೌಕೆಯೊಂದಿಗೆ ರಾಜಿಯಾಗುತ್ತೇನೆ… ಗ.೧೪ ಮನುಜರೆದೆಯ ಗಾಯಗಳಿಗೆ ಮುಲಾಮು ಹಚ್ಚುತ್ತೇನೆ ಉಸಿರಿರುವವರೆಗೆ ಸತ್ತ ಮೇಲೆ ಅರುಣಾಳ ಶವದ ಮುಂದೆ ಕಣ್ಣೀರನು ಹಾಕಬೇಡಿ… ಗ.೧೭ ಶುದ್ಧ ನಿರಾಕಾರ ಬಹ್ಮ ತಾನೆಂದು ತಿಳಿದಾಗ ಆತ್ಮ ಪರಮಾತ್ಮನೊಡಗೂಡಿ ಮಾತು ಮೌನವಾಗುತ್ತದೆ ..ಗ.೫೫. ಬಾಳ ಬನದಲಿ ಬೆಳೆದ ಅವಗುಣದ ಕಳೆ ತೆಗೆದು ಹುಲುಸಾಗಬೇಕು ಮನದ ಬಯಲಲಿ ಅಷ್ಟಮದಗಳ ಕಳೆದು ಹಸನಾಗಬೇಕು ಬದುಕು. ಗ.೩೬. ಈ ಗಜ಼ಲ್ ತನ್ನನ್ನೇ ತಾನು ಓರೆಗಚ್ಚಿಕೊಂಡು ಆತ್ಮ ಸಾಕ್ಷಾತ್ಕಾರ ಹೊಂದುವ ಹಾದಿಗೆ ಜಾರಿದಂತೆ  ಕಂಡು ಬಂತು. ತಮ್ಮ ಸುದೀರ್ಘ ಸಾಹಿತ್ಯದ ಪಯಣದಲ್ಲಿ ಬದುಕಿನ ನಿಜ ಅರ್ಥ ತಿಳಿದ ಇವರು ಸಮಾಜದ ಅಂಧಕಾರಗಳಿಗೆ ಬೇಸತ್ತು ಕೈ ಚೆಲ್ಲಿದ ಹಲವಾರು ಸಂಕಟಗಳು, ಮನೋವ್ಯತೆಗಳು ಎದೆಗಾನಿಸಿ ಕಂಬನಿ ಮಿಡಿದು ಸೆಟೆದು ನಿಲ್ಲುವಂತೆ  ಇಲ್ಲಿ ಸುಳಿಯುತ್ತವೆ… ಗುಡಿಸಲಿನ ಜನರು ಕಂಡ  ಕನಸುಗಳು ಮಹಡಿಯಲಿ ಕೊಳೆತು ಹೋಗುತ್ತವೆ ಬಲಾತ್ಕಾರಕ್ಕೆ ಒಳಗಾದ ಹೆಣ್ಣು ಮಕ್ಕಳು ಗೋರಿಯಲಿ ನರಳುತ್ತಾರೆ ಈ ಲೋಕದಲ್ಲಿ..ಗ. ೩೫.  ಈ ಮಿಸ್ರಗಳು ಕೆಲವು ಉಲ್ಲೇಖಗಳಷ್ಟೇ….. ಶೋಷಿತರ ಧ್ವನಿಗೆ ಕಿವಿಯಾಗಿ ಎದೆಯ ಆಲಯದಲಿ ಆಸರೆ ನೀಡುವ ಬಹುತೇಕ ಗಜ಼ಲ್ ಗಳು ಒಂದಕ್ಕಿಂತ ಒಂದು ವಿಭಿನ್ನ ಅರ್ಥ ಕಲ್ಲಿಸುವ ಬರಹ  ಈ ಸಂಕಲನದಲ್ಲಿ ಮನೆ ಮಾಡಿದೆ ಆದರೆ ನಾನು ಇಲ್ಲಿ ಇದನ್ನು ಮಾತ್ರ ಉದಾಹರಿಸಿರುವೆ… ತುಳಿತಕ್ಕೆ ಒಳಗಾದ ಜನರೆಲ್ಲ ಮೇಲೆದ್ದು ಕಟಿಬದ್ದರಾಗಲು ಹರಸು ಉಂಡ ಕಹಿ ನೋವಿನ ನೆತ್ತರದ ಹಾಳೆಯಲಿ ಅರುಣಾಳ ಹೊಸ ಇತಿಹಾಸವನ್ನೇ ಬರೆಸು ಸಾಕಿ..ಗ. ೪೭. ಚಿಂದಿ ಆಯ್ದ ಕೈಗೆ ಪೆನ್ನು ಪುಸ್ತಕವಿತ್ತು ಅಕ್ಷರದ ಜಾತ್ರೆಗೆ ಅವರನ್ನು ಕಳಿಸು ಸಾಕಿ. ದ್ವೇಶ , ಅಸೂಯೆ, ವಂಚನೆ, ಮತ್ಸರ, ಹೊಡದಾಟ, ಹಾರಾಟ ,ಸ್ವಾರ್ಥ ಏಕೆ ಬೇಕು ಜೀವನ ಮೂರು ದಿನದ ಸಂತೆ  ಜನರೆಲ್ಲರನ್ನು ಪ್ರೀತಿಯಿಂದ ಕಾಣು ಮಾನವತೆಯಿಂದ ಮಹಾ ಮಾನವನಾಗು ಎನ್ನವ ಸಂದೇಶ ನೀಡಿ  , ಆ ಹಾದಿಯಲ್ಲಿ ಬದುಕು ಸವೆಸಲು  ಹೆಣಗುತ್ತಿರಬಹುದು ಎಂದೆನಿಸದಿರದು. ಹೀಗೆ ಓದುತ್ತಾ ಸಾಗಿದಂತೆ ಲೌಕಿಕ ಜಗತ್ತಿನ ಜಂಜಡಗಳಿಂದ ಅಲೌಕಿಕ , (ಅಧ್ಯಾತ್ಮ)ದತ್ತ ಹೊರಳಿಸುವ ಇವರ ಬರಹಗಳು ಜೀವಕ್ಕೆ ಸಂಜೀವನಿಯನ್ನು ಹರಿಸಿ  ಹೊಸ ಚೈತನ್ಯವನ್ನು ತಂದುಕೊಡುತ್ತದೆ. ಈ ಸಂಕಲನದ ಜೊತೆಗೆ ಇನ್ನಷ್ಟು ಮತ್ತಷ್ಟು ಸಂಕಲನಗಳು ಹೊರ ತಂದು ಸಮಾಜದ ಅಂಕು ಡೊಂಕಿನ ಕವಲು ದಾರಿಗಳನ್ನು ಸಮಸಮಾಜವಾಗಿಸುವಲ್ಲಿ ಇವರ ಸಾಹಿತ್ಯ ಧ್ವನಿಸಲಿ ಎಂದು ಈ ಸಂದರ್ಭದಲ್ಲಿ ಶುಭಹಾರೈಸುತ್ತಾ ಇವರ ನೆರಳಿನಲ್ಲಿ  ಹೊಸ ತಲೆಮಾರಿನ ಉದಯೋನ್ಮುಖ ಬರಹಗಾರರು ಸಾಹಿತ್ಯದ ಸವಿ ಉಂಡು ಬೆಳಕಿಗೆ ಬರಲೆಂದು ಆಶಿಸುತ್ತೇನೆ. ************************ ಅಶೋಕ ಬಾಬು ಟೇಕಲ್ಷ

ಹಿಮದೊಡಲ ಬೆಂಕಿ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಸುಜಾತಾ ರವೀಶ್ ಬಾಳಿನ ಪಥದಲಿ ಬೀಸಿದ ತಂಗಾಳಿ ನೆನಪುಗಳ ಹಸಿಯಾಗಿಸಿತು ನಾಳಿನ ಕನಸಿನ  ಕಲ್ಪನೆ ಹಾದಿಯು ಮೆಲುಕುಗಳ ಬಿಸಿಯಾಗಿಸಿತು  ಧುತ್ತನೆ ಕವಿದಿಹ ಕಾರ್ಮೋಡ ಬಾನನು ಮಂಕಾಗಿಸಿತು ಒಮ್ಮೆಲೆಯೇ ಮೆತ್ತನೆ ಬರುತಿಹ ಹೊಂಗಿರಣ ನಗುವಿನ ಹೂಬಿಸಿಲಲಿ ಸೊಗಸಾಗಿಸಿತು ಮಾರ್ದವ  ಭಾವವ ಮುಳ್ಳಿನ ಮೊನೆಯೊಲು ಚುಚ್ಚ ತೊಡಗಿತು ಚಿಂತೆಯು ಹಾರ್ದಿಕ ಆಶಯ ಹೃದಯವ ಮುಟ್ಟುತ ಶಂಕೆಗಳನು ಮರೆಯಾಗಿಸಿತು ಜೀವನ ನೌಕೆಯು ಸಿಲುಕಿ ಬಿರುಗಾಳಿಗೆ ಹೊಯ್ದಾಡುತಿದೆ ಹೀಗೇಕೆ? ದೇವನ ಒಲುಮೆ ಭದ್ರತೆ ನೀಡುತ ಭರವಸೆಯಲಿ ಖುಷಿಯಾಗಿಸಿತು ಹಂಬಲ ಕಾಮನೆ ಮನುಜನ ಬದುಕಲಿ ನನಸಾದರೆನಿತು ಒಳಿತು ನಂಬಿದ ದೈವದ ಸನ್ನಿಧಿ ಸುಜಿಯ ಅಂತರಂಗದಲಿ ಮೊರೆಯಾಗಿಸಿತು   *******************************************

ಗಝಲ್ Read Post »

ಪುಸ್ತಕ ಸಂಗಾತಿ

ಪುಸ್ತಕ ಪರಿಚಯ

ಅಲೆವ ನದಿ ಅಲೆವ ನದಿಗಜಲ್ ಗಳುಕವಿ :- ಕಿರಸೂರ ಗಿರಿಯಪ್ಪಪ್ರಕಾಶನ :- ಸನ್ಮತಿ ಪ್ರಕಾಶನ ಬಾಗಲಕೋಟೆಬೆಲೆ‌:- ೮೦ಪುಟಗಳು :- ೫೮ ಗಜಲ್ ಎಂದಾಕ್ಷಣ ನೆನಪಿಗೆ ಬರುವುದುಪ್ರೇಮಿಗಳ ಸರಸ ಸಲ್ಲಾಪ ,ಮನದಾಳದ ಸುಕೋಮಲ ಭಾವನೆಗಳು, ಹೆಂಗಳೆಯರ ಪಿಸು ನುಡಿಗಳು , ಒಳಹೊಕ್ಕು ಹೊರ ನೋಡುವ ತೀಕ್ಷ್ಣಮತಿ ಸೂಕ್ಷ್ಮವಾದ ಭಾವನೆಗಳ ಪೂರಣ, ಗಜಲ್ನಸಾಮಾನ್ಯ ಲಕ್ಷಣಗಳು ಕಾಫಿಯಾ ,ರದೀಪ್,ಮತ್ಲಾ,ಮಕ್ತಾ, ಕಾಣಬಹುದು ನೆರಳು-ಬೆಳಕಿನಾಟದಂತೆ ಇವುಗಳನ್ನು ಹೊಂದಾಣಿಕೆ ಮಾಡಿದರೆ ಮಾತ್ರ ಗಜಲ್ ಆಗಲ್ಲ ಸಹಜವಾಗಿ ಮೇಳೈಸಿಕೊಂಡು ಹೃದಯವನ್ನು ತಟ್ಟಿ ಬಡಿದೆಬ್ಬಿಸಬೇಕು. ಗಜಲ್ಗಳು ಮನಸೂರೆಗೊಂಡು ಒನ್ಸ್ ಮೋರ್ ಭಾವನೆಯನ್ನು ಹೊರ ಸೂಸಬೇಕು,ಅಂದಾಗ ಆ ಗಜಲ್ ನ ಶೇರ್ ಕೇಳಿದಾಕ್ಷಣ ವ್ಹಾ ! ಉತ್ಕಟವಾದ ಭಾವನೆ ಹೊರಹೊಮ್ಮಬೇಕು ಅದು ಗಜಲ ಶಕ್ತಿ. ಬಾಗಲಕೋಟೆ ಜಿಲ್ಲೆಯ ಕಿರಸೂರು ಗಿರಿಯಪ್ಪನವರ ಗಜಲ್ ಸಂಕಲನ ಅಲೆವ ನದಿ ಒಳಗಿನ ಅಂತರಾತ್ಮವನ್ನು ಒಂದು ಸಾರಿ ನೋಡಿ ಬರೋಣ…ಮೊದಲಿಗೆ ಪುಸ್ತಕದ ಬಗ್ಗೆ ಮಾತನಾಡುವುದಾದರೆ ಮುದ್ರಣ ಬಹಳ ಅಚ್ಚುಕಟ್ಟಾಗಿ ಮುಖಪುಟದ ಚಿತ್ರವು ಕೂಡ ಅಷ್ಟೇ ಸೊಗಸಾಗಿ ಮನ ಸೆಳೆಯುವಂತೆ ಮೂಡಿಬಂದಿದೆ, ಮುಖಪುಟ ತಯಾರಿಸಿದ ಕಲಾವಿದರಿಗೆ ನನ್ನದೊಂದು ನಮನ. ಇದೊಂದು ನಿತ್ಯ ಅಲೆದಾಟ ಕಲ್ಮಶಗಳನ್ನುತೊಳೆದು ನಿತ್ಯ ಪರಿಸರ ಮಾತೆಯು ತನ್ನೊಡಲಲ್ಲಿ ತುಂಬಿಕೊಳ್ಳುವಳು ದಾಹವನ್ನು ನೀಗಿಸಿ ,ಜಾತಿ- ಮತ-ಪಂತ ಭೇದಗಳನ್ನು ಮರೆತು ಸ್ವಚ್ಛಂದವಾಗಿ ಹರಿಯುವ ಮಾತೆ , ನಿರ್ಗುಣ ,ನಿರಾಕಾರ,ಅಲೆವ ನದಿ ಪುಸ್ತಕದ ಒಳ ಹೂರಣವನ್ನು ತಿಳಿಯೋಣ ಈ ಪುಸ್ತಕದ ಟೈಟಲ್ ಕೂಡ ಬಹಳ ಚಂದವಿದೆ. ಗಜಲ್ ಗಳೆಂದರೆ ಪ್ರೇಮಿಗಳ ವಿರಹ, ಪ್ರೇಮಿಗಳ ಉತ್ಕಟ ಭಾವನೆ, ಸರಸ-ವಿರಸ ಸಮರಸ, ಪ್ರೀತಿಯ ಉತ್ತುಂಗದ ಸ್ಥಿತಿ, ನಿರಾಸೆ, ಕಾಮನೆಗಳು, ಕುಡುಕರ ಮಾತುಗಳು, ಹೆಂಗಳೆಯರ ಮನದಾಳದ ಪಿಸು ಮಾತುಗಳು, ಬದುಕಿನ ಮಧುಪಾತ್ರೆ, ಮೊದಮೊದಲು ಒಂದೇ ಗುಂಪಿಗೆ ಗಜಲ್ ಸೇರಿಕೊಂಡಿತ್ತು ಆದರೆ ಕಾಲ ಬದಲಾದಂತೆ ಅದರ ವಿಸ್ತಾರವು ಕೂಡ ಬದಲಾಗಿದೆ‌ ಹೇಗೆ ? ತನ್ನ ವಿಸ್ತಾರದ ಹರಿವನ್ನು ಗಜಲ್ ಲೋಕವು ಬಹು ವಿಸ್ತಾರವಾಗಿ ಹರಡಿಕೊಂಡಿದೆ ಜಗದ ಜಂಜಡ ಗಳಿಗೆ ಮಿಡಿಯುವ ಮನ, ಸದ್ಯದ ಆಗು ಹೋಗುಗಳಿಗೆ ಸ್ಪಂದಿಸುವ ಗಜಲ್, ರಾಜಕೀಯ,ಆರ್ಥಿಕ ಸ್ಥಿತಿ, ಮಹಿಳಾ ಪರ ಹೋರಾಟ ಧ್ವನಿ,ದಬ್ಬಾಳಿಕೆ, ದೌರ್ಜನ್ಯ, ಶೋಷಣೆ, ಗಡಿಯಾಚೆಯು ಪ್ರೀತಿಯ ಹಂಚುವಿಕೆಯ ಹುಡುಕಾಟವನ್ನು ಬಹುತೇಕ ಗಜಲ್ ಕವಿಗಳಲ್ಲಿ ಈಗೀಗ ನೋಡಬಹುದು ಇದು ಒಳ್ಳೆಯ ಬೆಳವಣಿಗೆ. *ಬತ್ತಿದ ಬಾವಿದಂಡ್ಯಾಗ* *ಬತ್ತಿದ ಬಾವಿದಂಡ್ಯಾಗ ಗುಬ್ಬಚ್ಚಿಗಳ ಪಾದ ನಲುಗ್ಯಾದೊ |*ಬ್ಯಾಸಗಿ ಹೊಡೆತಕ್ಕೆ ಇರುವೆಗಳ ಪಾದನಲುಗ್ಯಾದೊ | ಈ ಮತ್ಲಾ ಗಮನಿಸಿದಾಗ ಈಗ ಗುಬ್ಬಚ್ಚಿ ಕಣ್ಮರೆಯಾಗಿ ಪರಿಸರದಲ್ಲಿ ಅವುಗಳ ಕಲರವ ಇಲ್ಲದೆ ಮನುಜ ಮೂಕವಾಗಿದ್ದಾನೆ .ಮಳೆ‌ವಿಲ್ಲದೆ ಸಣ್ಣ ಜೀವಿ ಇರುವೆ ಕೂಡಾ ಬಹಳ ತೊಂದರೆಯಲ್ಲಿ ಇವೆ ಎನ್ನುವ ಅವರ ಪರಿಸರ ಕಾಳಜಿಯ ಪ್ರಸ್ತುತ ಮನುಜ ದುರಾಸೆಯನ್ನು ಈ ಮತ್ಲಾದಲ್ಲಿ ಗಮನ ಸೆಳೆಯುತ್ತದೆ. *ಅಳುವ ಮೋಡದ ಕಣ್ಣಿಗೆ* *ಅಳುವ ಮೋಡದ ಕಣ್ಣಿಗೆ‌ ನೆಲದ ಬಾಯಿ ಕಂಡಾಗ ಎಂಥಾ ಚಂದ |**ಕೊರಗೊ ರೆಂಬೆಯ ಒಡಲಿಗೆ ಮಣ್ಣ ನಗು ಸಿಕ್ಕಾಗ ಎಂಥಾ ಚಂದ |* ನಾಡಿನಲ್ಲಿ ‌ಮಳೆ ಬೆಳೆ ಎಲ್ಲಾ ಕಾಲಕ್ಕೆ ತಕ್ಕಂತೆ ಸರಿಯಾಗಿ ಆದರೆ ಬಹಳ ಚಂದ ,ಸಾಯುವ ಜೀವಕ್ಕೆ ಹಿಡಿ ಆಶ್ರಯ ಸಿಕ್ಕರೆ ಎಷ್ಟೋ ಆ ಮನ ಸಂತಸ ಗೊಳ್ಳುತ್ತದೆ ಅಲ್ಲವೆ ಕಲ್ಪನೆಯನ್ನು ಕವಿ ನಿತ್ಯ ಪರಿಚರ ಮೂಲಕ ಹೇಳಿದ್ದಾರೆ.ವ್ಹಾ.! *ಕಂಬನಿಯ ಪಾತ್ರೆ* *ಅವಳು ರಾತ್ರಿಯ ಬೆದೆಗೆ ನಲುಗಿ ಕನಸುಗಳ ಕಣ್ಣೀರು ಸುರಿದಳು |**ನನ್ನ ಹೃದಯದ ಪದ ಮಧು ಶಾಲೆಯ ಜೋಗುಳವಾಗಿ ತೇಲುತ್ತಿತ್ತು |* ಕವಿ ಅವಳು ರಾತ್ರಿ ಬೆದರಿ ,ಕನಸುಗಳು ಕಮರಿ ನಯನಗಳು ಒದ್ದೆಯಾದವು ಆ ನೋವಿಗೆ ಹೃದಯ ವೀಣೆ ಜೋಗುಳವಾಗಿ ಹಾಡುತ್ತಿತ್ತು ಬಹಳ ಸುಂದರವಾದ ವರ್ಣನೆ ಸಹಜವಾಗಿ ಮೂಡಿ ಬಂದಿದೆ. *ಖುತುಮಾನಗಳಿಗೊಂದು ಪತ್ರ* *ಇಬ್ಬನಿಯ ಹಿಗ್ಗಿನಲಿ ತೇಲುವ ಕರುಳ ಕುಟುಕಿನ ಜೋಳದ ಕುಡಿ ನಾನು**ಮುಸುಕದಿರಿ ಸಂತತಿಯ ಬೀಜ ನೆಲದ ತೇವ ಹಿಡಿದಾಡಿಸುವ ಕಾಲ* ಪ್ರತಿ ಅಣುರೇಣು ಕೂಡಾ ಸಂತೋಷದಲ್ಲಿ ತೇಲುವ ಸಮಯದಲ್ಲಿ ಸ್ವಲ್ಪವಾದರೂ ಆಶೆಯ ಭಾವನೆಗಳನ್ನು ಹೊಂದಿರುತ್ತದೆ, ಜೀವ ಸಂತತಿಯ ಹಾಳು ಮಾಡದಿರಿ ನೆಲದ ಋಣವ ತೀರಿಸಲು ಬಿಡಿ ಎಂದ ಆರ್ಥಾನಾದ ಭಾವ ಬಹುತೇಕ ಇವರ ಗಜಲ್ ಗಳಲ್ಲಿ ಕಾಣಬಹುದು ‌. *ಕತ್ತಲಿನಾಚೆ* *ಪ್ರೀತಿ ಗೆಲ್ಲದ ಪದಗಳು ಎಷ್ಟು ಹಾಡಿದರೇನು ! ಬೆಳಕಿನಾಚೆ**ಎದೆಗೆ ನಾಟದ ಧರ್ಮಗಳ ಎಷ್ಟು ಹುಡುಕಿದರೇನು ಕತ್ತಲಿನಾಚೆ‌* ಹೃದಯಗಳ ಭಾಷೆಯನ್ನು ಅರಿತು ಪ್ರೀತಿಯಿಂದ ಜಗವ ಗೆಲ್ಲಬೇಕು ಆ ಪದಗಳು ಪ್ರೀತಿಯಿಲ್ಲದ ಮೇಲೆ ಹೇಗೆ ಹುಟ್ಟುತ್ತವೆ ಎಂಥಾ ಮಾತು ಈ ಸಾಲು ನಾಡಿನ ಹಿರಿಯ ಕವಿಯಾದ ಡಾ | ಜಿ.ಎಸ್.ಶಿವರುದ್ರಪ್ಪ ಕವಿತೆ ನೆನಪಿಗೆ ಬಂತು.ಎದೆಯಲ್ಲಿ ಪ್ರೀತಿಯನ್ನು ನಾಟದ ಧರ್ಮ ಇದ್ದರೆಷ್ಟೊ ಬಿಟ್ಟರೆಷ್ಟೊ ! *ಪ್ರೀತಿ ಬಟ್ಟಲು* *ಫಲವತ್ತಾದ ಪೈರನು ಬೆಳೆದ ರಾಶಿಯಾದ ಕೈಗಳು**ಹುತ್ತದ ಬಳ್ಳಿಯಲ್ಲಿ ಒಡಲ ಸವಿಗಾಗಿ ತಡಕಾಡಿದವು* ರೈತ ತನ್ನ ನೆಲದವ್ವನ್ನು ಪ್ರೀತಿಯಿಂದ ಬೆಳೆಗಳನ್ನು ಬೆಳೆದು ಜಗಕ್ಕೆ ಅನ್ನವನ್ನು ನೀಡಿದ ಕೈಗಳು ಇಂದು ಆಧುನಿಕ ಕಾಲದ ವಿಷಪೂರಿತ ಕ್ರಿಮಿನಾಶಕಗಳ ಹಾವಳಿ,ನೀರಿಲ್ಲದೆ ಒಣ ಭೂಮಿಯಲ್ಲಿ ನಾಳೆಯ ಕಾಳಿಗಾಗಿ ಪರಿತಪಿಸುವ ಕಾಲ ಬಂದಿದೆ. *ಕುರಿ ಕಾಯುವ ನನ್ನೊಳಗ* *ನೇಗಿಲ ಹೂಡೋ ನನ್ನೊಳಗೆ ನೀನು ಹದವಾದ ಮಣ್ಣಿನ್ಹಂಗ**ನೆಲಕ್ಕುರುಳೋ ಎಲೆಗಳ ದನಿಯಲಿ ಹೊಸ ಚಿಗುರಿನ ನೆಲೆಯ್ಹಂಗ* ಈ ಷೇರ್ ಗಮನಿಸಿದಾಗ ನೇಗಿಲಯೊಳಗೆ ಅಡಗಿದೆ ಕರ್ಮವೆಂಬ ಕುವೆಂಪು ನೆನಪಿಗೆ ಬರುತ್ತದೆ.ಬದುಕಿನ ಬಹು ಪಾಲು ನಾವು ಮಣ್ಣಿನೊಂದಿಗೆ ಕಲಿಯಬೇಕು ಅವಳು ಹದಭರಿತವಾದ ಮಣ್ಣು ಎಂಬ ಹೋಲಿಕೆ ಸಹಜವಾಗಿದೆ.ಹೊಸ ಬೆಳಕಿನಲಿ ಜೀವನದಲಿ ನೆಲಕ್ಕೆ ಎಲೆಗಳು ಉರುಳಿ ಮರಳಿ ನೆಲದ ಋಣವನ್ನು ತೀರಿಸಬೇಕು,ಮತ್ತೆ ಹುಟ್ಟುವ ವಸಂತ ಚಿಗುರಿನ ನೆಲೆಯ್ಹಂಗ ಬಹಳ ಮಾರ್ಮಿಕವಾದ ಸಾಲುಗಳು. *ನೆಲದ ಮಾತಾಗಿ ಉಳಿದವು* *ಅಲೆಯ ಬಡಿತಗಳ ಅರಗಿಸಿ ಮುತ್ತುಗಳ ದನಿಯಾತು ಬೆವರು**ಹಜ್ಜೆಗಳ ಸವೆತ ಉಂಡ ರಸ್ತೆಗಳು ದೀಪಗಳ ನೆರಳಾಗಿ ಉಳಿದವು* ಕಷ್ಟಕಾರ್ಪಣ್ಯಗಳನ್ನು ನುಂಗಿದ ಜೀವ ಮುಂದೊಂದು ದಿನ ಸಿಹಿಯಾದ ಸವಿಗಳಿಗೆ ಅನ್ನು ಸವಿಯಬಲ್ಲದು ಅದರಂತೆ ಇಟ್ಟ ಹೆಜ್ಜೆ ಹೋರಾಟದ ಬದುಕಿನಲ್ಲಿ ಕಳೆದು ಹೋದ ದಿನಗಳಲ್ಲಿ ಆ ರಸ್ತೆಗಳೇ ಮುಂದೆ ನಿನಗೆ ದಾರಿದೀಪವಾಗಿ ಬೆಳಗಬಲ್ಲ ವೆಂಬ ಶ್ರಮಿಕರ ದಮನಿತರ ನುಡಿ ಈ ಸಾಲಿನಲ್ಲಿ ಕಾಣಬಹುದು. ಅವರ ಗಜಲ್ ಗಳನ್ನು ಗಮನಿಸುತ್ತಾ ಹೋದರೆ ಬಹುತೇಕ ಗಜಲ್ ಗಳು ತನ್ನ ಸುತ್ತಮುತ್ತಲಿನ ಅನುಭವಿಸಿದ ನೆಲಮೂಲದ ಅನುಭವಗಳ ಕಟ್ಟಿಕೊಟ್ಟ ಗಜಲ್ ಸಂಕಲನ ಎಂದು ಹೇಳಬಹುದು ಆದರೆ ಈ ಗಜಲ್ ಸಂಕಲನದಲ್ಲಿ 35 ಗಜಲ್ ಗಳು ಒಳಗೊಂಡಿವೆ. ಆದರೆ ಕವಿ ಏಕೋ ಒಂದೇ ಬಗೆಯ ಪ್ರಕಾರಕ್ಕೆ ಸೀಮಿತಗೊಂಡಂತೆ ಚೌಕಟ್ಟನ್ನು ಹಾಕಿಕೊಂಡಿದ್ದಾರೆ ಎಂದು ನನಗನಿಸುತ್ತದೆ.ಇವರ 30 ಗಜಲ್ ಗಳು ಮುರದ್ದಪ್  ಗಜಲ್ ಗಳಾಗಿದ್ದು ,ಉಳಿದ 5 ಗಜಲ್ ಗಳು ಗೈರಮುರದ್ದಪ್, ಒಟ್ಟಾರೆಯಾಗಿ ಒಂದೇ ಪ್ರಕಾರದ ಗಜಲ್ ಪುಸ್ತಕ ಮಾಡಿದ್ದರೆ ಓದುಗರಿಗೆ ಇನ್ನೂ ಚೆನ್ನಾಗಿತ್ತೇನೋ ಓದಿದಾಗ ಅನಿಸಿದ ಭಾವನೆ. *ಗಜಲ್ ಗಳೆಂದರೆ ಹಾಡುಗಬ್ಬ* ಸುಲಭವಾಗಿ ಹಾಡಿ ಅವುಗಳು ನಮ್ಮ ಮನವನ್ನು ತನಿಸಿ ಮತ್ತೆ ಮತ್ತೆ ನಮ್ಮೊಳಗೆ ಧ್ಯಾನಿಸುವಂತೆ ಮಾಡಬೇಕು ಇವರ ಬಹುತೇಕ ಗಜಲ್ಗಳು ಹಾಡಲು ಬರುವುದಿಲ್ಲ ,ಆದರೆ ಭಾವನೆ ತೀವ್ರತೆ, ಅಭಿವ್ಯಕ್ತಿ ಉತ್ಪ್ರೇಕ್ಷೆ ಎಲ್ಲವನ್ನು ಸೇರಿಸಿ ಒಂದು ಕ್ಷಣ ನಮ್ಮೊಳಗೆ ಅವುಗಳನ್ನು ಚಿಂತಿಸುವ ಪ್ರಯತ್ನ ಮಾಡಿದ್ದಾರೆ. ಇವರ ಗಜಲ್ಗಳು ಕಂಡಂತೆ ಕಾಫಿಯಾ ಮತ್ತು ರದೀಪ್ ಬಹಳ ಉದ್ದನೆಯ ಸಾಲುಗಳನ್ನು ಒಳಗೊಂಡಿವೆ , ರದೀಪ್ ಮತ್ತು ಕಾಫಿಯಾ ಕೇಳಿದ ತಕ್ಷಣ ವ್ಹಾ ಎನ್ನುವ ಉದ್ಗಾರ ನಮ್ಮೊಳಗೆ ಪ್ರಜ್ವಲಿಸಬೇಕು.ಆ ರೀತಿಯಲ್ಲಿ ಸಮ ಸಾಲುಗಳುಳ್ಳ ಸರಳ ಪದಗಳನ್ನು ಬಳಸಿದರೆ ಇನ್ನೂ ಚೆನ್ನಾಗಿರುತ್ತದೆಯೆಂದು ಹೇಳಬಹುದು. ಕವಿಯು ಹೊಲ, ರೆಂಟೆ,ಕುಂಟೆ, ಮಣ್ಣು ,ಎಲೆ, ಬೀಜ, ಕಣ್ಣು, ಹೀಗೆ ಇತ್ಯಾದಿ ಪದಗಳ ಸುತ್ತಲೂ ಗಜಲ್ ಗಳು ಗಿರಕಿ ಹೊಡೆದುವೆಂಬ ಭಾವನೆ ವ್ಯಕ್ತವಾಗುತ್ತದೆ , ಹಲವು ಕಡೆ ಬಳಸಿದ ಪದಗಳೇ ಪದೇಪದೇ ಪುನರ್ ಬಳಕೆಯಾಗಿವೆ.ಇಂಥ ಕಡೆ ಸ್ವಲ್ಪ ಗಮನಿಸಬೇಕೆಂಬ ಗಜಲ್ ಓದುಗನಾಗಿ,ಗಜಲ್ ಕೇಳುಗನ ವಿನಂತಿ. ಹೀಗೆ ಇವರ ಗಜಲ್ ಸಂಕಲನವನ್ನು ಗಮನಿಸಿದಾಗ ಚಂದನೆಯ ಮುಖಪುಟ ಗಜಲ್ ಗಳಿಗೆ ತಕ್ಕ ಹಾಗೆ ಇರುವ ರೇಖಾ ಚಿತ್ರಗಳು. ಗಜಲ್ ನ ಮೂಲ ಆಶಯವನ್ನು ಕನ್ನಡೀಕರಿಸುವುದು ಬಹಳ ಕಷ್ಟದ ಕೆಲಸ ಆದರೂ ಕವಿವರ್ಯ ಬಹಳ ಜಾಣ್ಮೆಯಿಂದ ಜನಪದಿಯ ಶೈಲಿಯಲ್ಲಿ ಆಡುಮಾತಿನಲ್ಲಿ, ಇವರ ಗಜಲ್ ಕಟ್ಟುವಗಾರಿಕೆ ವಿಸ್ಮಯಗೊಳಿಸುತ್ತದೆ, ನಿತ್ಯ ಬದುಕಿನ ಪ್ರೀತಿಯ ಹುಡುಕಾಟ ನೆಲದ ಮೇಲಿರುವ ಅದಮ್ಯ ಪ್ರೀತಿ,ಕೆಲವು ಕಡೆಗೆ ಮತ್ಲಾ ಮಕ್ತಾ ಸೂಜಿಗಲ್ಲಿನಂತೆ ಗಮನ ಸೆಳೆದು ನಿಲ್ಲಿಸಿಬಿಡುತ್ತದೆ, ಹಿರಿಯರು ಹೇಳಿದಂತೆ ಅನುಭಾವದಲ್ಲಿ ಅಮೃತವೂ ತುಂಬಿರುತ್ತದೆ ಹಾಗೆ ತತ್ವಪದಗಳಲ್ಲಿ,ವಚನಗಳ ಆಗಲಿ, ಸೂಫಿ ಸಾಹಿತ್ಯ,ಹೀಗೆ ಎಲ್ಲವೂ ಆ ಕಾಲಘಟ್ಟದ ನಡುವೆ ನಮ್ಮ ನೆಲವನ್ನು ಒಂದು ಕ್ಷಣ ಮಂತ್ರಮುಗ್ಧ -ರನ್ನಾಗಿ ಆಗಿನ ವ್ಯವಸ್ಥೆಯನ್ನು ಬಿಂಬಿಸುತ್ತದೆ, ಇವರು ಕೂಡ ತಮ್ಮ ಸುತ್ತಲಿನ ಪರಿಸರವನ್ನು ಬಿಂಬಿಸಿ ಗಜಲ್ ಮೂಲಕ ಪುಸ್ತಕವನ್ನು ಸಾಹಿತ್ಯಲೋಕಕ್ಕೆ ನೀಡಿದ್ದಾರೆ ನಮ್ಮೆಲ್ಲರನ್ನು ಹೊಸ ಬಗೆಯ ಒಳನೋಟವನ್ನು ಇಣುಕಿ ಇಣುಕಿ ನೋಡುವಂತೆ ಈ ಪುಸ್ತಕವು ಮಾಡುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ.ಪುಸ್ತಕ ಬಹಳ ಆಕರ್ಷಕವಾಗಿದೆ ಜೊತೆಗೆ ಬಳಸಿದ ಕಾಗದಗಳು ಮತ್ತು ಮುದ್ರಣವನ್ನು ಸುಂದರವಾಗಿ ಮಾಡಿದ್ದಾರೆ,ಅವರಿಗೂ ಪ್ರೀತಿಯ ಸಲಾಂ. ಹೊಸ ಪುಸ್ತಕಗಳು ಬಂದಾಗಲೆಲ್ಲ ಆ ಪುಸ್ತಕವನ್ನು ಕೊಟ್ಟು ಓದಿನ ರುಚಿ ಹಚ್ಚುವ ಬೆನ್ನುಬಿದ್ದು ಅದರ ಬಗ್ಗೆ ಟಿಪ್ಪಣಿ ಬರೆಸುವ ಕಥೆಗಾರರಾದ ಅನಿಲ್ ಗುನ್ನಾಪೂರ ಅವರಿಗೆ ಪ್ರೀತಿ ಪೂರ್ವಕವಾದ ಧನ್ಯವಾದಗಳು. ಪುಸ್ತಕದ ಹೆಸರಿನಲ್ಲಿಯೂ ಕೂಡ ವಿಸ್ಮಯ ಅಲೆವ ನದಿ* ಈ ಪುಸ್ತಕವನ್ನು ನೀವುಗಳು ಕೊಂಡು ಓದಿ ನಿಮಗೂ ಕೆಲವು ಬದುಕಿನ ಅಲೆದಾಟದ ಚಿತ್ರಣವು ದೊರಕುತ್ತದೆ ಎಂದು ಹೇಳಬಹುದು, ಸಾಹಿತ್ಯಲೋಕಕ್ಕೆ ಈ ರೀತಿಯ ಇನ್ನೂ ಹೆಚ್ಚಿನ ಪುಸ್ತಕಗಳು ವಿಭಿನ್ನವಾಗಿ ಕಿರಸೂರ ಗಿರಿಯಪ್ಪನವರಿಂದ ಬರಲಿ ಎಂದು ಶುಭ ಹಾರೈಸುತ್ತೇನೆ  **************************************** ಮುತ್ತು ಬಳ್ಳಾ ಕಮತಪುರ

ಪುಸ್ತಕ ಪರಿಚಯ Read Post »

ಅನುವಾದ

ವೈನ್ ಇಲ್ಲವೇ ಇಲ್

ಅನುವಾದಿತ ಕವಿತೆ ವೈನ್ಇಲ್ಲವೇಇಲ್ಲ ರಘುಪತಿ ಸಹಾಯ್ ಫಿರಾಖ್ ಗೋರಖ್ ಪುರಿ ಕನ್ನಡಕ್ಕೆ : ಆರ್.ವಿಜಯರಾಘವನ್ ಆಮಿಶಕ್ಕೊಳಪಡುವ ಖಾಲಿಯಾಗದ ಯಾವ ಮಧುವೂ ಇಲ್ಲಓ, ಹೂಬಿಡುವ ನಾರ್ಸಿಸಸ್ಸನ ನೋಟವೇ! ನಿನಗೆ ಯಾವ ಪ್ರತಿಸ್ಪರ್ಧಿಯೂ ಇಲ್ಲ. ನರಕಸದೃಶ ಸ್ಥಿತಿಯಲ್ಲಿರುವವನು ಸಂಪೂರ್ಣವಾಗಿ ಅಂಥ ಸ್ಥಿತಿಯಲ್ಲಿಲ್ಲಇದು ನರಕಗಳು ವಿಧಿಸಿದ ಶಿಕ್ಷೆ. ಆ ಶಿಕ್ಷೆ ಬಂದುದು ಪ್ರಿಯಕರನಿಂದ ಅಲ್ಲ ಪ್ರತಿ ಅಣುವೂ ನಿದ್ರಿಸದಿರುವ ನಿಶೆಯೇ ಇಂದಿನಿರುಳುನಾಳೆ ಒಂದು ಕ್ರಾಂತಿ ನಡೆಯಲಿದೆ, ಭೂಮಿ ಎಚ್ಚರದಿಂದಿದೆ ಜೀವನವು ನೋವಾಗಿ ಬದಲಾಗುತ್ತಲೇ ಇದೆ. ಈಗ ಏನಾಗಲಿದೆ?ಈಗ, ಆ ನೋಟ, ಪ್ರಾರ್ಥನೆಗಳಿಂದ ಯಾವುದೇ ಪ್ರಯೋಜನವಾಗದಿದೆ ಕಾರವಾನಿಗೆ ಚಂಡಮಾರುತ, ಗುಡುಗು ಮಿಂಚಿನ ಸೂಚನೆಗಳಿವೆಸಾವಿನ ಆತಂಕಗಳು ಅದರ ಮೇಲೆ ಯಾವುದೇ ನಿರ್ಬಂಧ ಹೇರದಿದೆ ಮಧು ಮತ್ತಿನೌಷಧಗಳ ಭಾರವಿರದಿಹ ಮಧುಶಾಲೆಗಳೆಲ್ಲಿಹವು?ವಿಶ್ವದ ಪಾರಮೇರೆಯ ಮೇಲೆ ಹರಡದಿರುವುದು ಒಂದು ಮೋಡವಲ್ಲದಿದೆ. ನಿನ್ನ ಪ್ರೀತಿ ನೀನೆಣಿಸಿದಂತೆ ಅಷ್ಟೊಂದು ಕೆಟ್ಟದ್ದಲ್ಲಅದಕ್ಕೆ ನೆಲವಿದೆ ಗಗನವಿದೆ ಅದು ವಿಶ್ವವನೆ ಹೊಂದಿದೆ ನನ್ನ ನಂಬಿಕೆ “ವಿಶ್ವದ ವಿರುದ್ಧ ಸ್ವರ್ಗ”ನಾನು ಪ್ರತಿಫಲವ ಬಯಸುತ್ತಿಲ್ಲ ದೇವರಿಗೆ ವಂದನೆಯಿದೆ ಯಾವಾಗಿನಿಂದ ಆ ಒಂದು ಗುರಿಯಲ್ಲಿ ದುಃಖದ ಕಾರವಾನ್ನಿಂತಿದೆ?ಯಾವಾಗಿನಿಂದ ಕ್ರಾಂತಿಯು ಕಾಲದ ಸಹ-ಪ್ರಯಾಣಿಕನಾಗದೆ ಉಳಿದಿದೆ? ಚಿಂತೆಬೇಡ! ಶತ್ರು ರುಂಡವ ಚೆಂಡಾಡಿದ ಬಳಿಕ, ಮೇಲಕ್ಕೆತ್ತಬಾರದು ಅದನ್ನುಯಾವಾಗ ತಾನೇ ಹಾರುವ ಧೂಳು ಕವಿಯ ಜೊತೆಗಾರನಾಗಿರದೆ ಉಳಿದಿದೆ? ಇಲ್ಲಿ ನಿಮ್ಮ ನೋವಿನಿಂದ ವಂಚಿತರಾದವರು ನಮಗೆಕೇಳಿಸುವ ವಿಶ್ವಪ್ರೀತಿಯ ಯಾವುದೇ ದುಃಖವನ್ನು ಹೊಂದದಿರಲಿ ಈಗಲೀಗಲೇ, ಮನುಷ್ಯನ ರಕ್ತ ನೀರಂತೆ ಹರಿಯಬಹುದುಈಗಲೀಗಲೇ ಜೀವನದ ಮುಖದಲ್ಲಿ ಹೊಳಪು ಮಾಸಬಹುದು ಪ್ರಪಂಚವ ಕುರಿತು ಪಾಪಿ ಜನಗಳು ಹೇಳುತ್ತಿದ್ದಾರೆ ಇಂತುಏರುತ್ತಿರುವ ಅಲೆ ತುಂಬಿದ ಈ ನದಿಯು ಮರೀಚಿಕೆಯಲ್ಲವೆಂದು ************************************

ವೈನ್ ಇಲ್ಲವೇ ಇಲ್ Read Post »

You cannot copy content of this page

Scroll to Top