ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಮರಕುಟಿಕ

ಕವಿತೆ ಮರಕುಟಿಕ ಡಾ. ಅರಕಲಗೂಡು ನೀಲಕಂಠ ಮೂರ್ತಿ ಒಂದು ಮರಕುಟಿಕ ಕುಕ್ಕುತ್ತಿದೆಕಾಯಕದಂತೆ ಕಾಯದೆಯಾರಿಗೂ ಎಡೆಬಿಡದೆಗುಕ್ಕು ಗುಕ್ಕು ಚಕ್ಕೆಯಷ್ಟೇಎಬ್ಬುತ್ತಿದೆ ಲೆಕ್ಕವಿಡದೆಮರದ ಕಾಂಡ-ಕೊಂಬೆಗಡುಸಾಗಿದೆ ವೀರ ಎದೆಯ ಹಾಗೆ! ಎಷ್ಟೊಂದು ಮರಕುಟಿಕಗಳುಬಂದು ಬಂದು ಕುಟಿಕಿ ಹೋಗಿದ್ದಾಗಿದೆಅರಿವು ಮಂಕಾಗುವಷ್ಟು ದಿನಗಳಿಂದಬರುತ್ತಲೇ ಇವೆ ಇಂದಿಗೂಸರದಿಯಲ್ಲೋಜಾತ್ರೆಯ ಜಂಗುಳಿಯಲ್ಲೋ… ಬಂದೇ ಬರುತ್ತವೆ ತಪ್ಪದೆ ಮುಂದೂ–ಮರವಿರುವಷ್ಟು ದಿನಅದರ ತಿರುಳು ತೊನೆವಷ್ಟು ದಿನಬಂದೇ ಬರುತ್ತವೆ… ಮರಕ್ಕೆ ನೋವಾಗುವುದೋ ಬಿಡುವುದೋಕುಟುಕುವ ಕೊಕ್ಕಿಗೇಕೆ ಉಸಾಬರಿ!ಕೆಲವೊಮ್ಮೆ ಮರ ಒಂದೇ…ಮರಕುಟಿಕಗಳನೇಕನೋವು ಮಾತ್ರ ನಿಶಬ್ದ ತದೇಕ!ಚಿಂತೆ ಕಂಬನಿ ಯಾರಿಗೆ…ಏಕೆ! ಮರ ಉರುಳಿ ಅಳಿದಮೇಲೆಎಲ್ಲಿಯ ಮರಕುಟಿಕಎಲ್ಲಿಯ ಕುಕ್ಕುವಿಕೆ…!

ಮರಕುಟಿಕ Read Post »

ಕಾವ್ಯಯಾನ

ಗಜಲ್

ಗಜಲ್ (ಗಾಂಧಿ:ಇನ್ನೊಂದು ನೋಟ) ಡಾ. ಗೋವಿಂದ ಹೆಗಡೆ ಚರಕ ನೂಲು ಕೋಲುಗಳಲ್ಲೇ ಅವನ ಕಂಡಿದ್ದೇವೆಕನ್ನಡಕವನ್ನು ಮರೆಯದೇ ಜೇಬಿಗೆ ಇಳಿಸಿದ್ದೇವೆ ಸ್ವರಾಜ್ಯ ಸತ್ಯಾಗ್ರಹ ಸ್ವದೇಶಿ- ದುಡಿಯುತ್ತ ಹೋದ ಅವನುನಾವು ಪುರಸೊತ್ತಾಗಿ ಕೂತು ಅವನ ಟೀಕಿಸುತ್ತೇವೆ ಒಂದೇ ಮಗ್ಗುಲ ಚಿತ್ರಗಳೆಂದರೆ ನಮಗೆ ಬಹಳ ಪ್ರೀತಿಒಂದು ಕಣ್ಣು ಮುಚ್ಚಿಯೇ ಎಲ್ಲವನ್ನೂ ಅಳೆಯುತ್ತೇವೆ ಕಪ್ಪು-ಬಿಳುಪುಗಳ ಆಚೆ ಲೋಕವೆಷ್ಟು ಸಂಕೀರ್ಣವಿದೆಕರಿಯ ಕನ್ನಡಕದಲ್ಲಿ ಕಂಡದ್ದು ಮಾತ್ರ ನಿಜವೆನ್ನುತ್ತೇವೆ ತಪ್ಪು ತೊಡರು ನೆರಳುಗಳನ್ನು ನೋಡುತ್ತ ನೀಡಿ ತೀರ್ಪುಬೆಳಕಿನೊಡನೆಯ ಮುಖಾಮುಖಿಗಳ ಬೇಕೆಂದೇ ಮರೆಯುತ್ತೇವೆ ಸಂಕೇತ-ಸಂಗತಿ, ಭಜನೆ-ಭಂಜನೆಗಳಲ್ಲಿ ನಮ್ಮ ನಡೆ ‘ಜಂಗಮ’ನಮ್ಮ ನಮ್ಮ ಅಳತೆಗೋಲುಗಳಲ್ಲೇ ಅವನ ಮಥಿಸುತ್ತೇವೆ *********************************

ಗಜಲ್ Read Post »

ಕಾವ್ಯಯಾನ

ದ್ವಿಪದಿಗಳು

ದ್ವಿಪದಿಗಳು ವಿ.ಹರಿನಾಥ ಬಾಬು ಯಾರನ್ನಾದರೂ ಏನ ಕೇಳುವುದಿದೆ?ಕೇಳಲು ಉಳಿದಿರುವುದಾದರೂ ಏನು ನೀನೇ ಇಲ್ಲದ ಮೇಲೆ! ಹತ್ತು ದಿಕ್ಕಿಗೂ ಹುಡುಕಾಡಿದೆ ಹುಚ್ಚನಂತೆಹಿಡಿದ ಹುಚ್ಚು ಮತ್ತಷ್ಟು ಗಟ್ಟಿಯಾಯಿತು ನೀ ಕಾಣದೆ ಎದುರಾದವರೆಲ್ಲಾ ದಿಟ್ಟಿಸಿ ನೋಡಿ ಹೋಗುತ್ತಿದ್ದಾರೆನೀನು ನನ್ನ ಕಣ್ಣೊಳಗೇನಾದರೂ ಅವಿತುಕೊಂಡಿರುವೆಯಾ?? ರೆಪ್ಪೆ ಮುಚ್ಚಿದರೆ ಕಡಲು ಉಕ್ಕಿ ಹರಿವುದುಹಾಯಿ ದೋಣಿಯ ಬಟ್ಟೆ ಆಕಾಶವ ಹೊದ್ದಿದೆ ಮರಗಿಡಗಳೂ ಮೌನ ತಾಳಿವೆಜೀವವಿರದ ಈ ದೇಹ ದಿಗಿಲುಗೊಂಡಿದೆ ಬೆಳ್ಳಕ್ಕಿ ಯಾಕೋ ಮುಗಿಲಕಡೆ ನೋಡುತಿದೆಈಗತಾನೇ ನೀನು ನಭಕೆ ಹಾರಿಕೊಂಡಂತೆ ಕಾಣುತಿದೆ ಒಂಟಿತನಕೆ ಯಾಕಿಷ್ಟು ಆತಂಕ?ನೀನು ಕೊಟ್ಟ ಪ್ರೀತಿಯ ಸವಿಮುತ್ತು ಇದ್ದ ಕಾಲಕ್ಕ ಹಗಲನೇಗೋ ಕಳೆದುಬಿಡುವೆ ಬೆಳಕಿನ ಜೊತೆಗೂಡಿಇರುಳು ನಿನ್ನ ನೆನಪ ಹೆಣವ ತಂದು ಸುರಿಯುತಿದೆ ಅಂಗಳಕೆ ನೀನಲ್ಲದೆ ಚಂದಿರ ಉರಿವ ಸೂರ್ಯನಿಗೂ ಮಿಗಿಲಾಗಿರುವಅವನ ಬೆಳದಿಂಗಳ ಬೆಂಕಿ ಕನಸುಗಳ ಸುಟ್ಟು ಕೇಕೆ ಹಾಕಿದೆ **********************************

ದ್ವಿಪದಿಗಳು Read Post »

ಕಾವ್ಯಯಾನ

ಪ್ರತಿಷ್ಠೆ ಬದಿಗಿಟ್ಟರೆ ಬಾಳು

ಕವಿತೆ ಪ್ರತಿಷ್ಠೆ ಬದಿಗಿಟ್ಟರೆ ಬಾಳು ಲಕ್ಷ್ಮೀದೇವಿ ಕಮ್ಮಾರ ಮನೆ ಮಿಡಿದರೂ ಪ್ರತಿಷ್ಟೆ ಗಡಿಅಡ್ಡಿಯಾಗಿದೆ ನನಗೂ ನಿನಗೂ ಅಕ್ಕಪಕ್ಕದ ಲ್ಲಿದ್ದರೂ ಅಹಂನ ಅಡ್ಡಗೋಡೆ ಅರಿಯಲಾರೆ ನನ್ನ ನೀನು ,ನಿನ್ನ ನಾನು ಬೇಕು ಬೇಕೆನಿಸಿರೂ ಸಾಕು ಮಾಡಿದ್ದೆವೆ ಮಾತುಕುಹಕಿಗಳಿಂದಾಗಿದೆ ಬಿರುಕುಒಡೆದು ಹೋಗುತ್ತಿದೆ ಪ್ರೀತಿ ಸೇತು ಒಲವದಾರೆ ಹರಿಸಲು ಬಂದುದರ ಕುರುಹುಅರಿಯದೆ ನಮ್ಮ ಸ್ವಾರ್ಥದ ಪರದಿಯಲಿ ಬಂದಿಯಾಗುಳಿದವರು ನಾವು ***********************************

ಪ್ರತಿಷ್ಠೆ ಬದಿಗಿಟ್ಟರೆ ಬಾಳು Read Post »

ಕಾವ್ಯಯಾನ

ಪ್ರೀತಿಯ ಬಿತ್ತಿ ಬೆಳೆಯಲು

ಕವಿತೆ ಪ್ರೀತಿಯ ಬಿತ್ತಿ ಬೆಳೆಯಲು ನಾಗರಾಜ ಹರಪನಹಳ್ಳಿ ನಾನು ಹೆಣ್ಣಾಗುವೆಗಾಂಧಿಯಂತಹ ಮಗನ ಹೆರಲು ಹೌದು,ಗಾಂಧಿಯಂಥ ಮಗ ಬೇಕುಈ ನೆಲಕ ದಿಕ್ಕು ತೋರಿಸಲು ಸಹನೆ ,ಸತ್ಯ ಅಹಿಂಸೆ ಹಂಚುವಗೋಡ್ಸೆ ಮನದ ಬಂದೂಕುಕಸಿದು, ಭೂಮಿ ಮೇಲಿನ ಗಡಿರೇಖೆ ಅಳಿಸಿಮನುಷ್ಯರೆಲ್ಲಾ ಒಂದೇ ಎಂದು ಮನದಟ್ಟು ಮಾಡಲುಗಾಂಧಿಯಂಥ ಮಗನ ಹೆರಬೇಕು ಗೋಡ್ಸೆ ಮನದ ಗಡಿಗಳ ಅಳಿಸಿಅವನ ಕಣ್ಣಿಗೆ ಕರುಣೆ ತುಂಬಿಅವನ ದೇಹದ ಅಣು ಅಣುವಿನಲಿ ದಯೆಯ ಬಿತ್ತಿಬೆಳೆಯಲು ಗಾಂಧಿಯಂತಹ ಮಗ ಬೇಕು ಹರಿದ ನೋಟು ,ಬೀದಿ ಕಸದ ಸ್ವಚ್ಛತೆಗೆ ಮೀಸಲಿಟ್ಟ ನನ್ನ ದೇಶದ ಜನನಾಯಕರ “ಕ್ಷಮಿಸು ಬಿಡು ಮಗನೆ” ಎನ್ನಲು ಗಾಂಧಿಯಂತಹ ಮಗ ಬೇಕು ಈ ನೆಲದ ಬೇರುಗಳಿಗೆ ರಕ್ತದ ಕಲೆಗಳಿವೆ ; ಬೆರಳುಗಳಿಗೆ ದ್ವೇಷದ ಹಸಿ ಮಾಂಸವಿದೆಹಿಂಸೆಯ ಭೂಮಿಯಲ್ಲಿಪ್ರೀತಿಯ ಬಿತ್ತಿ ಬೆಳೆಯಲುಗಾಂಧಿಯಂತಹ ಮಗನಹೆರಬೇಕು ನಾನು ಇಲ್ಲಿ ಪ್ರಾರ್ಥನಾ ಮಂದಿರಗಳು ಉರುಳಿವೆಗಲ್ಲಿ ಗಲ್ಲಿಗಳಲ್ಲಿ ಅನುಮಾನದ ಹುತ್ತಗಳೆದ್ದಿವೆ : ಕಾಣದ ಸರ್ಪಗಳು ಎಲ್ಲೋ ಅಡಗಿವೆ ಹುತ್ತವ ಬಡಿಯದೆ ,ಸರ್ಪಗಳ ಹಿಡಿದು ವಿಷ ತೆಗೆಯಲುಗಾಂಧಿಯಂಥ ಮಗ ಬೇಕಿದೆ ಗುಂಡಿಕ್ಕುವವನನೂ ಕ್ಷಮಿಸುವ ಗಾಂಧಿಯಂತಹ ಮಗನಮತ್ತೆ ಹೆರಬೇಕಿದೆಈ ನೆಲದ ತಾಯಿಯಾಗಿ ತಾಯ್ತನವ ಹಂಚಬೇಕಿದೆ ******************************

ಪ್ರೀತಿಯ ಬಿತ್ತಿ ಬೆಳೆಯಲು Read Post »

ಕಾವ್ಯಯಾನ

ಅಷ್ಟೇನೂ ಅಂತರವಿರಲಿಲ್ಲ

ಕವಿತೆ ಅಷ್ಟೇನೂ ಅಂತರವಿರಲಿಲ್ಲ ನಾಗರಾಜ ಮಸೂತಿ ಅಷ್ಟೇನೂ ಅಂತರವಿರಲಿಲ್ಲ,ಆದರೂನೆರಳು ತಾಗುತ್ತಿರಲಿಲ್ಲ ಅಷ್ಟೇನೂ ಅಂತರವಿರಲಿಲ್ಲ,ಆದರೂಹೋಟೆಲ್ಲಿನ ಚೆಂಬು ಲೋಟಗಳಿಗೆನಮ್ಮ ಸ್ಪರ್ಶದ ಅರಿವಿರಲಿಲ್ಲ ಅಷ್ಟೇನೂ ಅಂತರವಿರಲಿಲ್ಲ,ಆದರೂನಮ್ಮ ಕರಗಳು ಕರ್ಪುರದ ಕಾವುಕಂಡಿರಲಿಲ್ಲ ಅಷ್ಟೇನೂ ಅಂತರವಿರಲಿಲ್ಲ,ಆದರೂನಮ್ಮ ಆವಾಸಗಳು ಊರಂಚಿನಲ್ಲಿ ಮಿಂಚುತ್ತಿದ್ದವು ಆದರೆ ಮನಸ್ಸುಗಳುಇದೇ ಅಂತರದ ಅಗ್ನಿಯಸ್ಪರ್ಶದಿಂದ ಕರಕಲಾಗಿದ್ದವು… ************************************

ಅಷ್ಟೇನೂ ಅಂತರವಿರಲಿಲ್ಲ Read Post »

ಕಾವ್ಯಯಾನ

ನೀನಾದೆ ನೀನಾದೆ

ಕವಿತೆ ನೀನಾದೆ ನೀನಾದೆ ಶಾಂತಲಾ ಮಧು ನೀನಾದೆ ಜೀವನದದಾತೆ ತಾಯಿಜೀವನದ ದಾತರುಹಲವಾರುಮುಗ್ದ ಮನಸಿಗೆಹಬ್ಬಿ ಆಲಂಗಿಸಿಉತ್ಸಾಹಕೆ ಚಿಲುಮೆ ನೀನಾದೆ ನೀನಾದೆ ನೀನಾದೆಪ್ರೀತಿ -ಪ್ರೇಮ ವಾತ್ಸಲ್ಯದಲಿತಣಿಸಿ ಸಂಕಲ್ಪ ವಿಕಲ್ಪ ನೀನಾದೆ ನೀನಾದೆಭೂಮಿ ಆಕಾಶಜಲ-ಚರ ಪ್ರಕೃತಿನೀಭಾವನೆಗಳ ಕಲಿಸಿಪುಲಕಿಸಿ ಪ್ರಶ್ನಿಸಿಉತ್ತರವೂ ನೀನಾದೆ ನೀನಾದೆ ನೀನಾದೆತಪ್ಪು ಸರಿ ಕೊಂಡಿಗಳಪೋಣಿಸಿ ನಿನ್ನೀ ಪ್ರಿಯಸರವಾಗಿಸಿ ಮೆರಸಿನೀನಾದೆ ಆದೆಅರಿಷ್ಟ್ ವರ್ಗಗಳಿಗೆಶರಣಾಗಿಸಿ ಕಾಡಿಸಿಬಿಟ್ಟು ಬಿಡದೆಕತ್ತಲು ಬೆಳಕಮಾಯೆಯಲಿ ಮೀಯಿಸಿಮನತಟ್ಟಿ .ನೀನಾದೆನೀನಾದೆಸ್ವಾರ್ಥ ವಿಕಲ್ಪಕೆ ಪ್ರಶ್ನೆನೀನಾದೆ ಶೋಧನೆಗೆ ಹುಟ್ಟುಭಾವನೆ ಬದುಕಿಗೆಹುಡುಕಾಟ ,ನೀನಾದೆ ನೀನಾದೆತಪ್ಪಿಗೆ ಹುಸಿ ಹೊಣೆಗಾರ ನೀನಾದೆ ನೀನಾದೆಭಯ-ಭಕ್ತಿಗೆ – ಭ್ರಮೆ,ಅಳಲನಾಲಿಸಿಅಂತರಂಗದ ಮಾತಾಗಿಸತ್ಯ ನಿತ್ಯವೇ ನೀನಾದೆನೀನಾದೆ ನೀನಾದೆ ನಿನ್ನೊಳಗೇ ‘ನಾ’ ನಿದ್ದೂ“ನಾ “ ?ಪ್ರಶ್ನೆಯೇ ಆದೆ. *****************************************

ನೀನಾದೆ ನೀನಾದೆ Read Post »

ಅಂಕಣ ಸಂಗಾತಿ, ರಹಮತ್ ತರೀಕೆರೆ ಬರೆಯುತ್ತಾರೆ

ಅಂಕಣ ಬರಹ ನೈಸು-ಬಿರುಸು ಒಮ್ಮೆ ತೊಗಲುಬೊಂಬೆ ಕಲಾವಿದರಾದ ಬೆಳಗಲ್ಲು ವೀರಣ್ಣನವರ ಜತೆಗೆ ಮಾತಾಡುತ್ತ ಕುಳಿತಿದ್ದೆ. ಮಾತುಕತೆ ನಡುವೆ ಅವರ ಮನೆಯಿಂದ ಫೋನುಕರೆ ಬಂತು. ಅವರು ಎತ್ತಿಕೊಂಡು ಮರಾಠಿಯಲ್ಲಿ ಮಾತಾಡಿದರು. ಮಾತು ಮುಗಿದ ಬಳಿಕ ನನ್ನತ್ತ ಹುಳ್ಳಗೆ ನೋಡಿ `ನಮ್ಮದು ಒರಟು ಮರಾಠಿ’ ಎಂದರು. ಉತ್ತರ ಕರ್ನಾಟಕದ ತಿರುಗಾಟದಲ್ಲಿ ಕೆಲವರು ನನ್ನ ಕನ್ನಡಕ್ಕೆ `ನಿಮ್ಮ ಮಾತು ನೈಸು. ನಮ್ಮದು ಬಿರುಸು’ ಎಂದು ಪ್ರತಿಕ್ರಿಯಿಸುವುದುಂಟು. ವಿಚಾರಿಸಿ ನೋಡಿದರೆ, ಬಿರುಸೆಂದು ಭಾವಿಸಿದವರ ಮಾತಲ್ಲಿ ಆಡುಮಾತಿನ ಪ್ರಾದೇಶಿಕ ರೂಪಗಳು ಹೆಚ್ಚ್ಚಿರುತ್ತವೆ, ನೈಸೆಂದು ಕರೆಯಲಾಗುವ ಮತುಗಳಲ್ಲಿ ಬರೆಹದ ಶಿಷ್ಟತೆಯ ಪ್ರಮಾಣ ಹೆಚ್ಚಿರುತ್ತದೆ. ಪ್ರಶ್ನೆಯೆಂದರೆ, ತಮ್ಮ ವಾಗ್ರೂಪದ ಬಗ್ಗೆ ಈ ತಪ್ಪೊಪ್ಪಿಗೆಯ ಅಥವಾ ಕೀಳರಿಮೆಯ ದನಿಯಾಕೆ ಕಾಣಿಸಿಕೊಳ್ಳುತ್ತದೆ? ಈ ಕೀಳರಿಮೆ ಕನ್ನಡಕ್ಕೆ ಸೀಮಿತವಲ್ಲ, ಪ್ರಾದೇಶಿಕ ರೂಪಭೇದಗಳನ್ನು ಆಡುವ ಎಲ್ಲ ಭಾಷಿಕ ಸಮುದಾಯಗಳಲ್ಲೂ ಇದೆ. ಲಖನೊ-ದೆಹಲಿಯ ಉರ್ದುರೂಪಗಳು ಶ್ರೇಷ್ಠವೆಂಬ ನಂಬಿಕೆ ಭಾರತದ ಉಳಿದ ಪ್ರಾಂತ್ಯದ ಭಾಷಿಕರಲ್ಲಿದೆ. ಅದರ ಮುಂದೆ ಹೈದರಾಬಾದಿನ `ದಖನಿ’, ಸಿರಿವಂತರ ಮದುವೆಗೆ ಬಂದಿರುವ ಬಡವರ ತರಹ ಮುದುಡಿಕೊಳ್ಳುತ್ತದೆ. ತೆಲಂಗಾಣದ ತೆಲುಗು `ಒರಟು’ ಎಂಬ ಧೋರಣೆ ವಿಜಯವಾಡಾ-ಗೋದಾವರಿ ಭಾಗದವರಲ್ಲಿದೆ. ತೆಲುಗು ಸಿನಿಮಾಗಳಲ್ಲಿ ಯಜಮಾನಿಕೆ ಮಾಡುತ್ತಿರುವುದು ಇದೇ ಕರಾವಳಿಯ `ನೈಸು’ ತೆಲುಗು. ಸಿನಿಮಾಗಳು ತೆಲಂಗಾಣದ ನಟರನ್ನಿಟ್ಟುಕೊಂಡು ಹೈದರಾಬಾದ್ ಸ್ಟುಡಿಯೊಗಳಲ್ಲಿ ತಯಾರಾದರೂ, ವಿಜಯವಾಡ ಸೀಮೆಯ ಉಚ್ಚಜಾತಿಗಳಾಡುವ ಸಂಸ್ಕøತಭೂಯಿಷ್ಠ ತೆಲುಗನ್ನೇ ಬಳಸುತ್ತವೆ; ತಮಿಳು ಮಲೆಯಾಳ ವಿಷಯದಲ್ಲೂ ಇಂತಹ ಪ್ರಾದೇಶಿಕ ಶ್ರೇಣೀಕರಣ ಭಾವವಿದೆ. ತಿರುವನಂತಪುರದ ನಂಬೂದಿರಿಗಳ ಮಲೆಯಾಳವು ಮಿಗಿಲಾದುದೆಂಬ ಅಭಿಪ್ರಾಯ ಕೇರಳದಲ್ಲಿ ರೂಢವಾಗಿದೆ; ಪುಣೆಯ ಮರಾಠಿ ಶುದ್ಧವೆಂದೂ ವಿದರ್ಭದ ಅಥವಾ ಕೊಂಕಣದ ಮರಾಠಿಗಳು ಬೆರಕಿಯೆಂದೂ ಮಹಾರಾಷ್ಟ್ರಿಗರ ಗ್ರಹಿಕೆಯಿದೆ. ಬಹುಶಃ ಈ ತರತಮಪ್ರಜ್ಞೆ ಅಖಿಲ ಭಾರತೀಯವಾಗಿದೆ. ಇದೊಂದು ಭಾಷಿಕ ಬೇನೆ. ಭಾಷೆಯಲ್ಲಿ ಇದೆಯೆಂದು ನಂಬಲಾಗಿರುವ `ಒರಟು’ತನವು, ಪ್ರಕೃತಿಗೆ ಹತ್ತಿರವಾಗಿದ್ದು ಮೂಲರೂಪವನ್ನು ಗ್ರಾಮೀಣ ಜೀವಂತಿಕೆಯನ್ನು ಉಳಿಸಿಕೊಂಡಿರುವ ಎಂಬರ್ಥವಿದ್ದರೆ ಚಿಂತೆಯಿಲ್ಲ. ಅದು ಅಸೂಕ್ಷ್ಮ ಕಲಬೆರಕೆ ಎಂಬರ್ಥವಿದ್ದರೆ ಸಮಸ್ಯೆ. ಬೆಳಗಲ್ ವೀರಣ್ಣನವರು ಕಿಳ್ಳೆಕ್ಯಾತ ಸಮುದಾಯವರು. ಇದನ್ನು ಒಳಗೊಂಡಂತೆ ಕರ್ನಾಟಕದ ಗೋಸಂಗಿ ಹಕ್ಕಿಪಿಕ್ಕಿ ಬುಡ್ಗಜಂಗಮ ಮುಂತಾದ ಅಲೆಮಾರಿ ಕಲಾವಿದ ಸಮುದಾಯಗಳ ಮನೆಮಾತು ಮರಾಠಿ. ಈ ಸಮುದಾಯಗಳು ಮಹಾರಾಷ್ಟ್ರದಿಂದ ಯಾವಾಗ ಯಾಕಾಗಿ ಗುಳೆ ಬಂದವೊ ತಿಳಿಯದು. ಬಹುಕಾಲ ಕರ್ನಾಟಕದೊಳಗಿದ್ದ ಕಾರಣ, ತಮ್ಮದೇ ಆದ ಕನ್ನಡಮಿಶ್ರಿತ ಮರಾಠಿಯನ್ನು ರೂಪಿಸಿಕೊಂಡಿವೆ. ಈ ಮರಾಠಿಯು ಕನ್ನಡ-ತೆಲುಗು ಪ್ರದೇಶದಲ್ಲಿ ಬೆಳೆದಿರುವುದರಿಂದ ಸಹಜವಾಗಿ ದಟ್ಟ ದ್ರಾವಿಡತನದಿಂದ ಕೂಡಿದೆ. ಅದಕ್ಕಾಗಿ ಅವರು ಅದನ್ನು ಬಿರುಸೆಂದು ನಿರೀಕ್ಷಣ ಜಾಮೀನು ಅರ್ಜಿ ಹಾಕಿಕೊಳ್ಳುವುದರ ಅಗತ್ಯವಿಲ್ಲ. ಆದರೆ ವಾಸ್ತವದಲ್ಲಿ ಎಲ್ಲ ಭಾಷಿಕ ಮುಜುಗರಗಳ ಹಿಂದೆ ಉತ್ಕøಷ್ಟತೆಯ ಮಾದರಿಯೊಂದು ಕಣ್ಮುಂದೆ ಮೌಲ್ಯಮಾಪಕ ಅಧಿಕಾರ ಸ್ಥಾನದಲ್ಲಿ ನಿಂತಿರುತ್ತದೆ.ಜನ ತಮ್ಮ ನುಡಿ ಒರಟೆಂದು ಪರಿಭಾವಿಸಲು ವರ್ಗವೂ ಒಂದು ಕಾರಣ. ಚಲನಚಿತ್ರಗಳಲ್ಲಿ ತಮಾಶೆಗಾಗಿ ಬಳಕೆಯಾಗುವುದಕ್ಕೂ ಉತ್ತರ ಕರ್ನಾಟಕವು ರಾಜಕೀಯ ಅಧಿಕಾರ, ಸಂಪತ್ತಿನ ಹಂಚಿಕೆ, ಆಧುನಿಕತೆ ವಿಷಯದಲ್ಲಿ ಹಿಂದುಳಿದಿರುವುದಕ್ಕೂ ಸಂಬಂಧವಿದೆ. ಇಂಗ್ಲೀಶ್ ಮಾತಾಡುವ ಸಮುದಾಯಗಳಲ್ಲಿ, ಪದಬಳಕೆ, ವಾಕ್ಯರಚನೆ, ಉಚ್ಚಾರಣ ರೀತಿಯಲ್ಲಿರುವ ಭೇದಗಳು ಸೃಷ್ಟಿಸಿರುವ ತರತಮಗಳು ಅನಂತ. ಅಮೆರಿಕೆಯಲ್ಲಿ ಕಪ್ಪುಜನ ಮಾತಾಡುವ ಇಂಗ್ಲೀಶನ್ನು ಕೆಟ್ಟದೆಂದು ಬಿಳಿಯರು ವ್ಯಂಗ್ಯ ಮಾಡುವರೆಂದು ಕೇಳಿರುವೆ. ಭಾರತದಲ್ಲೇ ಬಿಹಾರಿಗಳ (ಭೋಜಪುರಿ) ಅಥವಾ ಕೇರಳಿಗರ ಇಂಗ್ಲೀಶ್ ಉಚ್ಚಾರಗಳನ್ನು ಕುರಿತು ಬಹಳ ಜೋಕುಗಳಿವೆ. ತಮ್ಮ ಇಂಗ್ಲೀಶ್ ಉಚ್ಚಾರಣೆಗಾಗಿ ಸ್ವತಃ ಆಂಗ್ಲ ಪ್ರಾಧ್ಯಾಪಕರೇ ಅಪಮಾನಿತರಾದ ಸನ್ನಿವೇಶಗಳನ್ನು ಅವರ ಆತ್ಮಕತೆಗಳು ಹೇಳುತ್ತವೆ.ನಮ್ಮದು ಬಹುಸಾಂಸ್ಕøತಿಕ ಬಹುಭಾಷಿಕ ಬಹುಧಾರ್ಮಿಕ ದೇಶವೆಂದೂ, ಏಕಸಂಸ್ಕøತಿ ಏಕಧರ್ಮ ಏಕಭಾಕ ದೇಶಗಳಲ್ಲಿಲ್ಲದ ವೈವಿಧ್ಯ ಮತ್ತು ಕೂಡುಬಾಳುವೆ ಇಲ್ಲಿದೆಯೆಂದೂ ಅಭಿಮಾನದಿಂದ ಕೊಂಡಾಡುತ್ತೇವೆ. ಆದರೆ ಬಾಹುಳ್ಯ ಮತ್ತು ವೈವಿಧ್ಯದ ಒಳಗೆ ಕ್ರಿಯಾಶೀಲವಾಗಿರುವ ತರತಮಗಳನ್ನು ಮರೆಮಾಚುತ್ತೇವೆ. ಪಾಕಿಸ್ತಾನದ ಉರ್ದು ಹಾಗೂ ಬಾಂಗ್ಲಾದೇಶದ ಬಂಗಾಳಿಗಳ ಪ್ರಾದೇಶಿಕ ಭಿನ್ನತೆಗಳಲ್ಲೂ ಇಂತಹವೇ ತಾರತಮ್ಯಗಳಿವೆ. ಶ್ರೇಣೀಕರಣವು ಉಪಖಂಡದ ಸಾಮಾಜಿಕ ಧಾರ್ಮಿಕ ಬದುಕಿನ ನೆತ್ತರೊಳಗೇ ಸೇರಿಹೋದಂತಿದೆ. ಅದರ ಝಳ ಭಾಷೆಯ ಮೂಲಕ ಮುಖದೋರುತ್ತಿದೆ.ಸಾಮಾನ್ಯವಾಗಿ ಎಲ್ಲ ಸಮಾಜಗಳಲ್ಲೂ ಉಚ್ಚಜಾತಿ, ಮೇಲ್ವರ್ಗ, ನಗರವಾಸಿ, ಆಧುನಿಕರು, ಅಕ್ಷರಸ್ಥರು, ಅಧಿಕಾರ ಕೇಂದ್ರಕ್ಕೆ ಸಮೀಪ ಇರುವವರು ಆಡುವ ಭಾಷಿಕ ರೂಪ ಮತ್ತು ಉಚ್ಚಾರಗಳು ಶ್ರೇಷ್ಠವೆಂದು ಪರಿಗಣಿತವಾಗಿರುತ್ತವೆ. ಕೆಳಜಾತಿ, ಕೆಳವರ್ಗ, ಗ್ರಾಮೀಣ, ಆನಾಧುನಿಕ ಹಾಗೂ ಹಿಂದುಳಿದ ಪ್ರದೇಶದ ಜನರು ತಮ್ಮ ಭಾಷೆಗೆ ಮಾತ್ರವಲ್ಲ, ಸಂಸ್ಕøತಿ ಉಡುಪು ಆಹಾರಗಳನ್ನು ಕೀಳ್ಗಳೆವ ಸಿದ್ಧಾಂತಗಳಿಗೆ ಸಮ್ಮತಿ ಕೊಟ್ಟಿರುತ್ತಾರೆ. ಭಾಷಾವಿಜ್ಞಾನದ ಪ್ರಕಾರ ಭಾಷೆಯಲ್ಲಿ ಒರಟು-ನೈಸು, ಶ್ರೇಷ್ಠ-ಕನಿಷ್ಠ ಎಂಬುದು ಇರುವುದಿಲ್ಲ. ನಿರ್ದಿಷ್ಟ ಭಾಷೆ ವಿಭಿನ್ನ ಚಾರಿತ್ರಿಕ ಸಾಮಾಜಿಕ ಭೌಗೋಳಿಕ ಕಾರಣಗಳಿಂದ ಬಹುರೂಪಧಾರಣೆ ಮಾಡುವುದನ್ನು ಅದು ವಿವರಿಸುತ್ತದೆ. ಆದರೆ, ಚಾರಿತ್ರಿಕ ಒತ್ತಡಗಳಿಂದ ಹುಟ್ಟುವ ಈ ಬಹುತ್ವದೊಳಗೆ ಅಡಗಿರುವ ಭೇದಪ್ರಜ್ಞೆಯ ದೆಸೆಯಿಂದ, ಅದರ ರೂಪಗಳಲ್ಲಿರುವ ಶ್ರೇಷ್ಠ ಮತ್ತು ಕೀಳು ಭಾವವು ಚಾಲ್ತಿಗೆ ಬಂದುಬಿಡುತ್ತದೆ. ಈ ಭೇದಕ್ಕೆ ಕಾರಣ, ಭಾಷಿಕ ರೂಪದೊಳಗಿನ ಪದರಚನೆ ವಾಕ್ಯರಚನೆಗಳಲ್ಲ. ಅವನ್ನಾಡುವ ಜನರ ಹಿನ್ನೆಲೆಗಳು. ಶ್ರೇಷ್ಠವೆಂದೂ ನೈಸೆಂದೂ ಭಾವಿಸಲಾದ ರೂಪವು `ಕೆಳ’ `ಒರಟು’ `ಅಶುದ್ಧ’ ಎನಿಸಿಕೊಂಡಿರುವುದನ್ನು ಗೇಲಿ ಮಾಡುತ್ತದೆ. ಧಾರವಾಡ (ಕೆಲವೊಮ್ಮೆ ಮಂಗಳೂರು) ಕನ್ನಡವು ಬೆಂಗಳೂರು ಕೇಂದ್ರಿತ ಸಿನಿಮಾಗಳಲ್ಲಿ ಬಹುಕಾಲ ಹಾಸ್ಯಪಾತ್ರಗಳಲ್ಲಿ ಬಳಕೆಯಾಗುತ್ತಿತ್ತು. ಆದರೆ ಈಗೀಗ ಧಾರವಾಡ ಕನ್ನಡದಲ್ಲಿ ಸಿನಿಮಾ ಸೀರಿಯಲ್ ತಯಾರಾಗುತ್ತಿವೆ. ಆದರೆ ಅಲ್ಲೆಲ್ಲೂ ಮೈಸೂರು ಕನ್ನಡವನ್ನು ತಮಾಶೆಗಾಗಿ ಬಳಸಿಕೊಂಡಿರುವ ನಿದರ್ಶನಗಳನ್ನು ನಾನು ನೋಡಲಿಲ್ಲ. ಸಂಸ್ಕøತಭೂಯಿಷ್ಠ ಅಧಿಕೃತ ಹಿಂದಿಯ ಅಹಮಿಕೆ ಮತ್ತು ಕೃತಕತೆಯನ್ನು ಗೇಲಿಮಾಡುವ `ಚುಪ್ಕೆಚುಪ್ಕೆ’ ತರಹದ ಚಿತ್ರಗಳು ಕನ್ನಡದಲ್ಲಿ ಬಂದಂತಿಲ್ಲ. ಜನರನ್ನು, ಅವರ ಜಾತಿ ಪ್ರದೇಶ ಧರ್ಮ ವೃತ್ತಿ ಭಾಷೆಗಳ ನೆಲೆಯಿಂದ ಕೀಳರಿಮೆಗೊಳಿಸುವುದು, ಅವರ ಸಹಜ ವಿಕಾಸದ ಪ್ರಕ್ರಿಯೆಯನ್ನು ಮುರುಟಿಸುತ್ತದೆ. ಈ ಅಸಹಜ ಸನ್ನಿವೇಶ ಎರಡು ಹೊರದಾರಿಗಳನ್ನು ಹುಟ್ಟಿಸುತ್ತದೆ. ಒಂದು- ಶ್ರೇಷ್ಠವೆನಿಸಿರುವ ಭಾಷಿಕ ರೂಪವನ್ನು ಕುರುಡಾಗಿ ಅನುಕರಿಸುವುದಕ್ಕೆ. ಕರ್ನಾಟಕದ ನಗರ ಮಧ್ಯಮವರ್ಗದ ಮುಸ್ಲಿಮರು ಫಾರಸಿಯುಕ್ತ ಉರ್ದುವನ್ನು ವೈಯಾರದಲ್ಲಿ ಬಳಸುವುದರಲ್ಲಿ ಇದನ್ನು ಗಮನಿಸಬಹುದು. ಎರಡು- `ಒರಟು’ ಎನಿಸಿಕೊಂಡಿರುವ ರೂಪವನ್ನೇ ಕೆಚ್ಚಿನಿಂದ ಬಳಸುವುದು. ಉತ್ತರ ಕರ್ನಾಟಕದ ಕೆಲವು ಲೇಖಕರು ಮೈಸೂರು ಬೆಂಗಳೂರಿಗೆ ಹೋದರೂ ಜಿಗುಟುತನದಿಂದ ತಮ್ಮ ಪ್ರಾದೇಶಿಕ ರೂಪವನ್ನೇ ಬಳಸುತ್ತಿರುವರು. ಆದರೂ ಈ ಕೆಚ್ಚು ಕೆಲವರ ವೈಯಕ್ತಿಕ ಹಠವಾಗಿ ಉಳಿದಿಕೊಂಡಿದೆ. ಅದು ಬರೆಹಕ್ಕೆ ವಿಸ್ತರಣೆಯಾಗಿದ್ದು ಕಡಿಮೆ. ಟಪ್ಪಾಲು ಮುಟ್ಟಿತು ಎನ್ನುವುದಕ್ಕೂ ಪತ್ರ ತಲುಪಿತು ಎನ್ನುವುದಕ್ಕೂ ಅರ್ಥವ್ಯತ್ಯಾಸವಿಲ್ಲ. ಆದರೆ ಭಾವ ಮತ್ತು ಸೊಗಡಿನಲ್ಲಿ ಭಿನ್ನತೆಯಿದೆ. ಸ್ನಾನ, ಮೈತೊಳೆ, ಜಳಕಗಳ ನಡುವೆ; ಆಕಳು-ಹಸು-ಗೋವುಗಳ ನಡುವೆ ಪ್ರಾದೇಶಿಕ ಮಾತ್ರವಲ್ಲ, ಸಾಂಸ್ಕøತಿಕ ಫರಕುಗಳೂ ಇವೆ. ತೆಲುಗಿನಲ್ಲಿ ಮಳೆಯ ಅರ್ಥವುಳ್ಳ `ಯಾನಮು’ ಮತ್ತು `ವರ್ಷಮು’ಗಳು ಬಳಸುವವರ ಸ್ಥಾನನಿರ್ಣಯ ಮಾಡುತ್ತವೆ. ಸಮುದಾಯಗಳು ತಮ್ಮ ಭಾಷಿಕ ರೂಪಗಳನ್ನು ಕೀಳರಿಮೆಯಿಲ್ಲದೆ ಬಳಸುವುದು ಪ್ರಜಾಸತ್ತಾತ್ಮಕ ಹಕ್ಕಿನ ಸಂಗತಿ. ಆಯಾ ಪ್ರದೇಶದ ಅಥವಾ ಸಮುದಾಯಗಳ ಆಲೋಚನಕ್ರಮ, ಅನುಭವ ಜಗತ್ತು, ತಾತ್ವಿಕ ನಂಬಿಕೆ, ಸಾಂಸ್ಕøತಿಕ ನಡಾವಳಿಗಳು, `ಒರಟು’ ಎನಿಸಿಕೊಂಡ ರೂಪಗಳಲ್ಲಿ ಹಾಲಿನೊಳಗಿನ ತುಪ್ಪದಂತೆ ಅಡಗಿರುತ್ತವೆ. ಇದರ ಸಾಂಸ್ಕøತಿಕ ಅನನ್ಯತೆಯನ್ನು ಲೋಕಕ್ಕೆ ಲೇಖಕರು ಕಾಣಿಸುವರು. ಇದೊಂದು ಮಹತ್ವದ ಸಾಂಸ್ಕøತಿಕ ಹೊಣೆ ಕೂಡ. ಶ್ರೇಷ್ಠ ಶುದ್ಧ ನೈಸು ಅನಿಸಿಕೊಂಡಿರುವ ರೂಪಗಳಲ್ಲಿರದ ಕಸುವು ಚೆಲವುಗಳು `ಒರಟು’ `ಕಲಬೆರಕೆ’ `ಕೀಳು’ ಎನಿಸಿದ ರೂಪಗಳಲ್ಲಿ ಇರುವುದುಂಟು. ಸಾಮಾನ್ಯವಾಗಿ ಪ್ರಮಾಣೀಕರಣ ಪಡೆದ ಅಧಿಕೃತ ಭಾಷಿಕ ರೂಪಗಳು ಅತಿಬಳಕೆಯಿಂದ ಸವೆದಿರುತ್ತವೆ; ಒರಟೆನಿಸಿಕೊಂಡ ರೂಪವಿನ್ಯಾಸಗಳು ತಾಜಾತನದಿಂದ ಬೆಳಗುತ್ತಿರುತ್ತವೆ. ತಮ್ಮ ಮೇಲೆ ಕವಿದುಬಿದ್ದಿರುವ ಕೀಳರಿಮೆಯ ಧೂಲಿನ ದೆಸೆಯಿಂದ ಅವು ವಿಭಿನ್ನ ನಿಯೋಗಗಳಲ್ಲಿ ಬಳಕೆಯಾಗದೆ ಹಿಂಜರಿದು ನಿಂತಿರುತ್ತವೆ. ಈ ಹಿಂಜರಿಕೆ ಕೆಲವೊಮ್ಮೆ ಅವುಗಳ ಕಣ್ಮರೆಗೆ ಕಾರಣವಾಗಬಹುದು. ಉರ್ದು ಗಾದೆ ಮತ್ತು ನುಡಿಗಟ್ಟುಗಳನ್ನು ನೋಡುವಾಗ ನನಗೆ ಈ ಘೋರಸತ್ಯ ಹೊಳೆಯುತ್ತದೆ. ಅಲ್ಲಿ ಜೀವಂತಿಕೆಯಿಂದ ನಳನಳಿಸುವ ಎಷ್ಟೊಂದು ಗಾದೆಗಳಿವೆ. `ಜೀನಾ ಕರಗೆ ಹವ್ವಾ, ಗಾಂಡಕೊ ಬಂದಿ ತವ್ವಾ’ (=ಬಾಳುವೆ ಮಾಡೆ ಹವ್ವಕ್ಕ ಅಂದರೆ ಕುಂಡೆಗೆ ಕಾವಲಿ ಕಟ್ಕೊಂಡಿದ್ದಳಂತೆ) ಇವುಗಳಲ್ಲೊಂದು. ಇವು ಜನಬಳಕೆಯಲ್ಲಿ ಮುಜಗರವಿಲ್ಲದೆ ಸಹಜವಾಗಿ ಬಳಕೆಯಾಗುತ್ತವೆ. ಇವುಗಳಲ್ಲಿರುವ ನೇರಗುಣ, ತೀಕ್ಷ್ಣತೆ, ಹರಳುಗಟ್ಟಿದ ಅನುಭವ, ಕಾವ್ಯದ ಲಯಬದ್ಧತೆ ಮತ್ತು ಸಂಕ್ಷಿಪ್ತತೆ, ಧ್ವನಿಪೂರ್ಣತೆಗಳು ಜೀವಂತವಾಗಿವೆ. ನಗರ ಪ್ರದೇಶದ ಮಧ್ಯಮವರ್ಗದ ಜನರ ಪ್ರೌಢಉರ್ದುವಿಗೆ ಹೋಲಿಸಿದರೆ ಇದರ ಶಕ್ತಿ ಎದ್ದುಕಾಣುತ್ತದೆ. ಆದರೆ ಕರ್ನಾಟಕದ ಉರ್ದು ಲೇಖಕರು ಇದರ ಅನುಸಂಧಾನವನ್ನೇ ಮಾಡಿದಂತಿಲ್ಲ. ಫಾರಸಿಭೂಯಿಷ್ಠ ರಮ್ಯ ಉರ್ದುವಿನ ಯಜಮಾನಿಕೆಯಲ್ಲಿ ಅವರ ಬರೆಹ ಮಾತು ಬಳಲುತ್ತಿವೆ ಅನಿಸುತ್ತದೆ. ನಮ್ಮ ಅನೇಕ ತತ್ವಪದಕಾರರು ಈ ಪ್ರಾದೇಶಿಕ ‘ಒರಟು’ ಕನ್ನಡವನ್ನು ತಮ್ಮ ಬರೆಹದಲ್ಲಿ ಬಳಸಿರುವುದುಂಟು. ಇದನ್ನು ಬಹಳ ತಡವಾಗಿ ಆಧುನಿಕ ಲೇಖಕರು ಮುಜುಗರಬಿಟ್ಟು ಬಳಸಿದರು. ಇದನ್ನು ಪಾತ್ರಗಳಾಡುವ ಸಂಭಾಷಣೆಯಲ್ಲಿ ಮಾತ್ರವಲ್ಲ, ಅದರ ಹಿಂದೆ ಮುಂದೆ ಇರುವ ನಿರೂಪಣ ಭಾಷೆಯಲ್ಲೂ ತಂದರು. ಕೀಳೀಕರಿಸಿದ ಭಾಷಿಕ ರೂಪಗಳನ್ನು ತಿಳಿವಿನ ಅನುಸಂಧಾನದೊಳಗೆ ತರುವುದು ಅಸ್ಮಿತೆ ಹೋರಾಟ ಮಾತ್ರವಲ್ಲ, ಸಮಾಜವಾದಿ ಕ್ರಿಯೆ ಕೂಡ. ಇದು ಹದುಳದಾಯಕ ಸಮಾಜವನ್ನು ಕಟ್ಟುವಾಗ, ಎಲ್ಲ ಜನವರ್ಗಗಳನ್ನು ಒಳಗೊಳ್ಳುವ ಅಭಿವೃದ್ಧಿ ಮೀಮಾಂಸೆಗೂ ಸಂಬಂಧಿಸುವ ತತ್ವ. ******************************* ರಹಮತ್ ತರೀಕೆರೆ ರಹಮತ್ ತರಿಕೆರೆಯವರು- ಕನ್ನಡದ ಗಮನಾರ್ಹ ಲೇಖಕ. ಹಂಪಿ ವಿಶ್ವವಿದ್ಯಾಲಯದ ಪ್ರೋಫೆಸರ್. ನಾಡಿನ ಸಂಸ್ಕೃತಿ, ಸೌಹಾರ್ದತೆಯ ಬೇರುಗಳ ಜಾಡು ಹಿಡಿದು, ಆಯಾ ಊರುಗಳಿಗೆ ಹೋಗಿ, ಮಾಹಿತಿ ಹಾಕಿ, ಅಲ್ಲಿನ ಜನರ ಜೊತೆ ಬೆರೆತು, ಸಂಶೋಧನಾ ಲೇಖನಗಳನ್ನು ಬರೆದವರು.‌ಕರ್ನಾಟಕದ ಸಂಗೀತಗಾರರು ಹಾಗೂ ಅವರು ದೇಶದ ಇತರೆ ಭಾಗಗಳಲ್ಲಿ ನೆಲೆಸಿದವರ ಬಗ್ಗೆ ಹುಡುಕಾಡಿ ಬರೆದವರು. ಅವರ ನಿರೂಪಣಾ ಶೈಲಿ ಅತ್ಯಂತ ಆಕರ್ಷಕ. ಮನಮುಟ್ಟುವಂತೆ ಬರೆಯುವ ರಹಮತ್ ತರೀಕೆರೆ ಕನ್ನಡದ ,ಬಹುತ್ವದ ,ಸೌಹಾರ್ದತೆಯ ಪ್ರತೀಕವೂ ಆಗಿದ್ದಾರೆ

Read Post »

ಇತರೆ

ಹುಯಿಲಗೋಳ ನಾರಾಯಣರಾಯ..!

ಲೇಖನ ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು’ವಿನ ಹುಯಿಲಗೋಳ ನಾರಾಯಣರಾಯ..! ಇಂದು ಹುಯಿಲಗೋಳ ನಾರಾಯಣರಾಯರ ಜನ್ಮದಿನ. ಆ ನೆನಪಲ್ಲಿ ಈ ಬರಹ… ಹುಯಿಲಗೋಳ ನಾರಾಯಣರಾಯರು ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಕರ್ನಾಟಕ ನಾಡಗೀತೆಯೆನಿಸಿದ್ದ ‘ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು’ ಗೀತೆಯನ್ನು ರಚಿಸಿದವರು. ೧೮೮೪ ಅಕ್ಟೋಬರ್ ೪ ರಂದು ಗದಗದಲ್ಲಿ ಜನಿಸಿದವರು. ಇವರ ತಂದೆ ಕೃಷ್ಣರಾಯರು, ತಾಯಿ ರಾಧಾಬಾಯಿ(ಬಹಿಣಕ್ಕ). ಬಾಲ್ಯದ ಶಿಕ್ಷಣವನ್ನು ಗದಗ, ಗೋಕಾಕ ಹಾಗೂ ಧಾರವಾಡಗಳಲ್ಲಿ ಪೂರೈಸಿದರು. ೧೯೦೨ ರಲ್ಲಿ ಧಾರವಾಡದಲ್ಲಿ ಮೆಟ್ರಿಕ್ ಪರೀಕ್ಷೆಯನ್ನು ಮುಗಿಸಿ ಉಚ್ಚ ಶಿಕ್ಷಣಕ್ಕಾಗಿ ಪುಣೆಯ ಫರ್ಗ್ಯೂಸನ್ ಕಾಲೇಜನ್ನು (ಮುಂಬೈ ವಿಶ್ವವಿದ್ಯಾಲಯ) ಸೇರಿದರು. ೧೯೦೭ ರಲ್ಲಿ ಬಿ.ಎ. ಪದವಿಯನ್ನು ಪಡೆದ ಬಳಿಕ ಧಾರವಾಡದ ವಿಕ್ಟೋರಿಯಾ ಪ್ರೌಢಶಾಲೆಯಲ್ಲಿ ಶಿಕ್ಷಕರಾದರು. ಕೆಲಕಾಲದ ನಂತರ ಶಿಕ್ಷಕ ವೃತ್ತಿಯನ್ನು ತ್ಯಜಿಸಿ, ಮುಂಬೈಗೆ ತೆರಳಿ, ಕಾನೂನು ಪದವಿಯನ್ನು ಪಡೆದು ೧೯೧೧ರಲ್ಲಿ ವಕೀಲಿ ವೃತ್ತಿಯನ್ನು ಗದಗದಲ್ಲಿಯೇ ಆರಂಭಿಸಿದವರು. ಇಂತಹ ಹುಯಿಲಗೋಳ ನಾರಾಯಣರಾಯರು ‘ಕರ್ನಾಟಕ ಏಕೀಕರಣ’ದಲ್ಲಿ ಪ್ರಮುಖ ಪಾತ್ರ ವಹಿಸದವರಲ್ಲಿ ಒಬ್ಬರು. ಅಲ್ಲದೇ ಧಾರವಾಡದ ವಿದ್ಯಾವರ್ಧಕ ಸಂಘದ ಸ್ಥಾಪನೆಯಲ್ಲೂ ಪ್ರಮುಖರಲ್ಲೊಬ್ಬರಾಗಿದ್ದವರು. ನಾರಾಯಣರಾಯರು ಮೂಲತಃ ನಾಟಕಕಾರರು. ಕನ್ನಡ ರಂಗಭೂಮಿಗಾಗಿ ಕಾಲ್ಪನಿಕ, ಐತಿಹಾಸಿಕ, ಪೌರಾಣಿಕ, ಸಾಮಾಜಿಕ ಹೀಗೆ ವಿವಿಧ ಬಗೆಯ ನಾಟಕಗಳನ್ನು ರಚಿಸಿ ಪ್ರದರ್ಶಿಸಿದವರು. ಇವರ ಅನೇಕ ಕವನಗಳು ಅಂದಿನ ಪತ್ರಿಕೆಗಳಾದ ‘ಜೈ ಕರ್ನಾಟಕ ವೃತ್ತ’ , ‘ಪ್ರಭಾತ’ , ‘ಧನಂಜಯ’ ಮೊದಲಾದವುಗಳಲ್ಲಿ ಪ್ರಕಟವಾದವು. ನಾರಾಯಣರಾಯರು ತಮ್ಮ ನಾಟಕಗಳಿಗಾಗಿ ಗೀತೆಗಳನ್ನೂ ರಚಿಸಿದರು. ನಾರಾಯಣರಾಯರು ‘ಮೂಡಲು ಹರಿಯಿತು’ ಎಂಬ ಕಾದಂಬರಿಯನ್ನೂ ಬರೆದಿದ್ದರೆಂದು ತಿಳಿದು ಬರುತ್ತದೆ. ಆದರೆ ಈ ಕಾದಂಬರಿಯ ಹಸ್ತಪ್ರತಿ ಈಗ ಲಭ್ಯವಿಲ್ಲ. ನಾಟಕಗಳು– ಹುಯಿಲಗೋಳ ನಾರಾಯಣರು ಐತಿಹಾಸಿಕ, ಪೌರಾಣಿಕ, ಸಾಮಾಜಿಕ, ಕಾಲ್ಪನಿಕ ನಾಟಕಗಳನ್ನು ರಚಿಸಿದವರು. ಅವುಗಳು ಕೆಳಕಂಡಂತಿವೆ– # ಕಾಲ್ಪನಿಕ ವಜ್ರಮುಕುಟ (೧೯೧೦) ಕನಕವಿಲಾಸ (೧೯೧೩) # ಐತಿಹಾಸಿಕ ಪ್ರೇಮಾರ್ಜುನ(೧೯೧೨) ಮೋಹಹರಿ(೧೯೧೪) ಅಜ್ಞಾತವಾಸ(೧೯೧೫) ಪ್ರೇಮವಿಜಯ(೧೯೧೬) ಸಂಗೀತ ಕುಮಾರರಾಮ ಚರಿತ(೧೯೧೭) ವಿದ್ಯಾರಣ್ಯ(೧೯೨೧) # ಪೌರಾಣಿಕ ಭಾರತ ಸಂಧಾನ(೧೯೧೮) ಉತ್ತರ ಗೋಗ್ರಹಣ(೧೯೨೨) # ಸಾಮಾಜಿಕ ಸ್ತ್ರೀ ಧರ್ಮ ರಹಸ್ಯ(೧೯೧೯) ಶಿಕ್ಷಣಸಂಭ್ರಮ(೧೯೨೦) ಪತಿತೋದ್ಧಾರ(೧೯೫೨) ಅವರಿಗೆ ಸಂದ ಪ್ರಶಸ್ತಿ ಹಾಗೂ ಗೌರವಗಳು ಹೀಗಿವೆ– ಆಗಿದ್ದ ಮುಂಬಯಿ ಸರಕಾರವು ಪತಿತೋದ್ಧಾರ ನಾಟಕಕ್ಕೆ ೧೯೫೪ರಲ್ಲಿ ಬಹುಮಾನ ನೀಡಿತು. ಕಲೋಪಾಸಕ ಮಂಡಳಿಯಿಂದ ಸನ್ಮಾನ – ೧೯೫೨ ಗದಗ – ಬೆಟಗೇರಿ ನಾಗರಿಕರಿಂದ ಸನ್ಮಾನ – ೧೯೩೫ ಗದಗ ವಕೀಲರ ಸಂಗದಿಂದ – ೧೯೫೫ ಕರ್ನಾಟಕ ಸರ್ಕಾರ ಪ್ರಥಮ ರಾಜ್ಯೋತ್ಸವ – ೧೯೫೬ ಕನ್ನಡ ಸಾಹಿತ್ಯ ಪರಿಷತ್ತು – ೧೯೬೧ ಇನ್ನಿತರ ವಿಷಯಗಳು– ಹುಲಗೋಳ ನಾರಾಯಣರಾಯರ ಸಂಗಡಿಗರು ಅಥವಾ ನಾಟ್ಯವಿಲಾಸಿಗಳು ಆಡಿದ ಇವರ ನಾಟಕಗಳ ಸಂಪಾದನೆಯನ್ನು ಸಮಾಜಶಿಕ್ಷಣ ಮತ್ತು ಸುಧಾರಣೆಗೆ ವಿನಿಯೋಗಿಸಲು ಇವರು ಉದ್ದೇಶಿಸಿದ್ದರು. ಅದರಂತೆಯೇ ಗದಗಿನಲ್ಲಿ ವಿಧ್ಯಾದಾನ ಸಮಿತಿಯಿಂದ ಪ್ರೌಢಶಾಲೆಯೊಂದು ನಿರ್ಮಾಣವಾಯಿತು. ನಾರಾಯಣರಾಯರು ಅನೇಕ ಸಾಮಾಜಿಕ ಸಂಘಟನೆಗಳಲ್ಲಿಯೂ ಸೇವೆ ಸಲ್ಲಿಸಿದ್ದರು… ‘ಉದಯವಾಗಲಿ’ ಗೀತೆ ರಚಿಸಿದರು. ಇಂತಹ ಹುಯಿಲಗೋಳ ನಾರಾಯಣರಾಯರು ೪, ಜುಲೈ ೧೯೭೧ರಂದು ಹುಬ್ಬಳ್ಳಿಯಲ್ಲಿ ನಿಧನರಾದರು… ಇಂತಹ ಹುಯಿಲಗೋಳ ನಾರಾಯಣರಾಯರ ಪುಸ್ತಿಕೆಗಳನ್ನ ಮುಂದೆ ಕನ್ನಡ ಪುಸ್ತಕ ಪ್ರಾಧಿಕಾರವು “ಹುಯಿಲಗೋಳ ನಾರಾಯಣರಾಯರು ಜೀವನ ಸಾಧನೆ”ಯನ್ನು ಪುಸ್ತಕದಲ್ಲಿ ಪ್ರೊ.ಸಂಪದಾ ಸುಭಾಷ್‌, ಕನ್ನಡ ಪುಸ್ತಕ ಪ್ರಾಧಿಕಾರ, ೨೦೧೨.ರಲ್ಲಿ ಪ್ರಕಟಿಸಿತು. ಹೀದ್ದರು ಹುಯಿಲಗೋಳ ನಾರಾಯಣರಾಯರು. ಮತ್ತು ಹೀಗಿತ್ತು ಹುಯಿಲಗೋಳ ನಾರಾಯಣರಾಯರ  ಸಾಹಿತ್ಯ ಸಾಧನೆ… **************************** ಕೆ.ಶಿವು.ಲಕ್ಕಣ್ಣವರ

ಹುಯಿಲಗೋಳ ನಾರಾಯಣರಾಯ..! Read Post »

ನಿಮ್ಮೊಂದಿಗೆ

ಕಲಿಕೆ ಕಸಿದ ಕರೋನ

ಕವಿತೆ ಕಲಿಕೆ ಕಸಿದ ಕರೋನ ಜಿ.ಎಸ್.ಹೆಗಡೆ ಶಾಲೆಯ ಅಂಗಳದಿ ಬೆಳೆದಿವೆ ಈಗಮುಳ್ಳಿನ ಜೊತೆಗೆ ಕಳ್ಳಿಗಳುಕಲಿಕಾಕೋಣೆಯ ಚಪ್ಪರ ತುಂಬಿದೆಜೇಡರ ಬಲೆಯೊಳು ಕೀಟಗಳುಹಾಜರಿ ವಹಿಗೆ ಮೆತ್ತುತ್ತಿದೆ ಈಗಮಣಗಟ್ಟಲೆ ಧೂಳುಅಡುಗೆ ಮನೆಯಲಿ ಓಡಾಡುತಿವೆಇಲಿ ಜಿರಲೆಗಳು ಜೋರು ಪರಿಮಳವಾದ ಪೆನ್ಸಿಲ್ ರಬ್ಬರ್ಬ್ಯಾಗೊಳು ಹಾಗೆ ಇವೆಹೊಸ ಹೊದಿಕೆಯನು ಧರಿಸಿಹ ಪುಸ್ತಕತೆರೆಯಲು ಕಾಯುತಿವೆಅಪ್ಪನು ಕೊಡಿಸಿಹ ಬಣ್ಣದ ಛತ್ರಿಮಳೆಯೊಳು ಆಡು ಎನ್ನುತಿದೆಮಾವನು ಕೊಡಿಸಿಹ ಹೊಸ ಬಟ್ಟೆಯುಹುಟ್ಟುಹಬ್ಬವನು ನೆನಪಿಸಿವೆ ಶಾಲೆಗೆ ಹೋದರೆ ಗುರುಗಳು ಎಂದರು‘ಬರಬೇಡವೋ ನೀನು ಶಾಲೆ‌ ಕಡೆ,ನೀನಿದ್ದಲ್ಲಿಗೆ ನಾನೇ ಬರುವೆನುನೀಡಿರಿ ಗಮನವ ವಿದ್ಯೆಯೆಡೆ’ಊರಿನ ಗುಡಿಗೋಪುರ ಅಂಗಣದಲ್ಲಿ‌ಮಕ್ಕಳ ಮೊಗಕೆ ಮುಸುಕುಕಲಿಯುವ ಆಸೆಗೆ ಮುಸುಕನು ಹಾಕಿತುಕರೋನದಿ ಮುದುಡಿತು ಕನಸು ಮಕ್ಕಳೇ ಬನ್ನಿರಿ ತನ್ನಿರಿ ನೀವುಹಳೆ ಪುಸ್ತಕಗಳ ಗಂಟುನೆನಪಿಸಿ ಕಲಿಸುವೆ ಮರೆತಿರುವುದನುಹೊಸ ಪಠ್ಯಕೆ ನೀಡುವೆ ನಂಟುಬೇಡ ಗುರುಗಳೆ ಹಳೆಯ ಪಾಠವುಬೇಸರ ತರಿಸುತಿದೆಹೊಸ ಪಾಠಗಳ ದಿನವೂ ಕಲಿಸಿರೆಸಂತಸ ಉಕ್ಕುತಿದೆ *************

ಕಲಿಕೆ ಕಸಿದ ಕರೋನ Read Post »

You cannot copy content of this page

Scroll to Top