ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅನುವಾದ

ಅನುವಾದ ಸಂಗಾತಿ

ಕವಿತೆ ಸಾವಿಗೊಂದು ಪತ್ರ ಸಾವೇ, ನೀನು ಹುಟ್ಟಿನಿಂದಜೊತೆಗೇ ಬಂದಿರುವೆತಿಳುವಳಿಕೆ ಬಂದಂತೆಭಯದಿಂದ ದೂರವಿರಿಸಿದೆನೆನಪಿಸದೆ, ವಿಳಾಸವೂ ಹುಡುಕದೆ. ವಿಳಾಸ ಬೇಕಿರಲಿಲ್ಲ ಬದುಕಿನುದ್ದಕ್ಕೂ….ನಿರುಮ್ಮಳ ಉಸಿರೆಳೆಯುವಾಗಸ್ವಚ್ಛಂದವಾಗಿ ಸಾಗುವಾಗಪ್ರತೀ ದಿನವು ನೆರಳಂತೆಹೊತ್ತು ಜೀವಿಸುವಾಗಅದಕೇ ನೆನೆಯಲಿಲ್ಲ ನಿನ್ನ. ದೇಹದ ಚಿತ್ರಣ ಬದಲಾಗಿದೆಮುಪ್ಪೆರಗಿ ಕುಂದಿದೆಉಸಿರಿಗೂ ಅಳುಕೇಆಹಾರಕೂ ನಳಿಕೆಶಸ್ತ್ರಕ್ರಿಯೆಗೆಂದು ಅರಿವಳಿಕೆಸಹಜಕ್ರಿಯೆಗಳೆಲ್ಲ ನಿಲ್ಲುತ್ತಿವೆನಿನ್ನನೇ ಬಲವೆಂದು ಕಾಯ್ದಿರುವೆ. ಪರಸೇವೆಗೆ ದೇಹ ಬೀಳದಂತೆನೋವಿಲ್ಲದಂತೆ ನಸುನಕ್ಕೇಫಕ್ಕನೆ ಆರುವ ದೀಪದಂತೆನನ್ನನ್ನೊಮ್ಮೆ ತಬ್ಬುವಿಯಂತೆಬಂದು ಬಿಡು ನೀ ಬಂಧುಸಹಜ ಸವಿನಿದ್ರೆಗೆ ಜಾರಿದಂತೆ..! ————ಕನ್ನಡ ಮೂಲ- ಅಜಿತ ಹೆಗಡೆ, ಹರೀಶಿ A letter to the death Death,you are with meSince i took birth.As being matured,fear kept you awayneither recalled nor tried to search for your address. No address needed, throughout the life,While breathing relief,Moving with carefree walk,Everyday like a shadowCarrying with life,I didn’t recall you. Now the body changed,deformed with the old ageeven hesitant to breathtube to take foodAnesthesia for surgeryCommon functionsbeing stopped.having the beliefthat you are. the strength and waiting . As to be served by noneSmile like not having pain,like a light turns off in sudden.You embrace me but once,my dear, come to me,as I am sleeping sweet. Translated into english by-Nagarekha Gaonkar

ಅನುವಾದ ಸಂಗಾತಿ Read Post »

ಇತರೆ, ಲಹರಿ

ಭರವಸೆಯ ಹೊರತು ಬೇರೇನೂ ಉಳಿದಿಲ್ಲ’

ಲಹರಿ ಭರವಸೆಯ ಹೊರತು ಬೇರೇನೂ ಉಳಿದಿಲ್ಲ’ ವಸುಂಧರಾ ಕದಲೂರು                             ಕವಚಿ ಹಾಕಿದ್ದ ಖಾಲಿ ಮಂಕರಿಯನ್ನು ಬೋರಲಾಕಿದಂತೆ, ಎಲ್ಲಾ ಖಾಲಿಖಾಲಿಯಾದ ಭಾವ. ಹಾಗೆಂದು ನಿರಾಳ ಅಂತೇನಲ್ಲ. ಮನಸ್ಸು ಭಾರವಾಗಿದೆ. ಏನೆಲ್ಲಾ ಇದೆ. ಆದರೂ ಏನೇನೂ ಇಲ್ಲ ಎನ್ನುವ ಒಂಟಿತನ ಹಿಂಡಿಹಿಪ್ಪೆ ಮಾಡುತ್ತಿದೆ. ಬಿಸಿಲಿಗೆ ಒಣ ಹಾಕಿದ ಬಟ್ಟೆ ಒಣಗೀ ಒಣಗೀ ಅಲ್ಲೇ ಇದ್ದು ಕೊನೆಗೆ ಬಣ್ಣಗೆಟ್ಟಂತೆ…      ಸದಾ ಗಿಜಿಗಿಜಿ ಗಜಿಬಿಜಿಯಲ್ಲಿ ಸುತ್ತಾಡುತ್ತಿದ್ದ ಮೈ ಮನಸ್ಸೆಲ್ಲಾ ಒಂದು ಕ್ಷಣಕ್ಕೆ  ಥಟ್ ಎಂದು ಏಕಾಂತ ವಾಸಕ್ಕೆ ಹೋಗಿ ನಿರ್ಜನ ಕಾಡ ಮಧ್ಯದಲ್ಲಿ ವಿರಮಿಸಿದಂತೆ ಭಾಸವಾಯಿತು. ಆಹಾ.!! ಇದೇ ಬೇಕಾಗಿತ್ತು ನನಗೆ ಎನಿಸಿ ಎಷ್ಟು ಖುಷಿಪಟ್ಟಿತೋ ಮನಸ್ಸು ಗೊತ್ತಿಲ್ಲ. ಆದರೆ ದಿನ ಕಳೆದ ಮೇಲೆಯೇ ಗೊತ್ತಾದದ್ದು ಅದು ವಿಶ್ರಮಿಸುವ ಏಕಾಂತವಲ್ಲ ಭಯ ಹುಟ್ಟಿಸುವ ಸೆರೆವಾಸದ ನರಕವೆಂದು.       ಏನೇನೋ ಕಸರತ್ತುಗಳು. ಸಮಾಧಾನಕ್ಕೆ, ಸ್ಫೂರ್ತಿಗೆ, ಭರವಸೆಗೆ ಯತ್ನಿಸುತ್ತಾ ನಾನೂ ನನ್ನವರೂ ಹೀಗೆ ಎಲ್ಲರನ್ನೂ ಹುರಿದುಂಬಿಸಲು ಪ್ರಯತ್ನಿಸುತ್ತಲೇ ಇರುವುದು.     ಇದೇ ಸರಿಯಾದ ಸಮಯ. ನಿನ್ನೊಳಗೆ ನೀನೇ ಇಣುಕಿ ನೋಡು. ನೀನು ಯಾರೆಂಬುದೇ ಮರೆತಿದ್ದೆಯಲ್ಲಾ. ಮನೆ, ಮಕ್ಕಳು, ಮನೆಯವರು… ಇನ್ನಾದರೂ ಗಮನಕೊಡು. ಆಂತರ್ಯದ ಕೂಗು ಇನ್ನಿಲ್ಲದಂತೆ ಎಬ್ಬಿಸಲು ಪ್ರಯತ್ನಿಸಿತು. ಹೌದು ನಿಜ. ನಮ್ಮ ಬದುಕು ಈಗ ಮತ್ತೆ ನಮಗೇ ಸಿಕ್ಕಿದೆ. ನಮ್ಮ ಇಷ್ಟದ ತಿನಿಸು, ಮನೆಯವರಿಷ್ಟದ ಉಣಿಸು, ಸಿನೆಮಾ, ಪುಸ್ತಕ…     ಇಷ್ಟಯೇ… ಸಾಕೇ..?!    ಇಲ್ಲ, ಸ್ನೇಹವಿಲ್ಲದೇ, ಸುತ್ತಾಟವಿಲ್ಲದೇ ಇರಲಾಗದು, ಇರಲಾಗದು. ನಾವೇನು ಹಳೆಯ ಕಾಲದವರೇ? ಹೊಲ -ಮನೆ ತೋಟ-ತುಡಿಕೆ ಎಂದು ದಿನ ಮುಗಿಸಲು? ನಗರದಲ್ಲಿ ವಾಸಿಸಲು ಬಂದ ಮೇಲೆ ಗದ್ದೆ ತೋಟಗಳ ಮಾತಾದರೂ ಎಲ್ಲಿಂದ ಬರಬೇಕು? ಪ್ರತಿ ದಿನವೂ ಎಂಟರಿಂದ ಹತ್ತು ಗಂಟೆ ಕಾಲ ಮನೆಯ ಹೊರಗೇ ಕಾಲನ್ನು ಇಟ್ಟವರು ನಾವು. ಈಗ ಕಾಲಿನ ಚಲನೆಯೂ ಇಲ್ಲದಂತೆ, ಕಾಲದ ಚಲನೆಯೂ ಕಾಣದಂತೆ ಉಳಿದುಬಿಡುವುದು ಹೇಗೆ ಸಾಧ್ಯ?     ಎಷ್ಚೆಂದು ಟಿ.ವಿ ನೋಡುವುದು? ಪುಸ್ತಕ ಸಾಂಗತ್ಯ ಮಾಡುವುದು? ಮನೆ ಮಂದಿಯೊಡನೆ ಹರಟುವುದು?  ಅವರಿಗೂ ಬೇಸರವೇ…    ಮಕ್ಕಳಂತೂ ಜೊತೆಗಾರರಿಲ್ಲದೆ ಮೊಬೈಲ್, ಲ್ಯಾಪ್ಟಾಪು, ಟಿ.ವಿ. ಗಳ ಸಾಂಗತ್ಯದಲ್ಲಿ  ರೊಬೋಟುಗಳೇ ಆಗಿಬಿಡುತ್ತಾರೇನೋ ಎಂಬ ಆತಂಕ. ಮಡದಿಯೊಡನೆ ಹೇಳಿಕೊಳ್ಳಲಾರದ ಆಡಲಾರದ ಮಾತುಗಳಿಗೆ ಗಂಡನಿಗೆ ಗೆಳೆಯನ ಕಿವಿ ಬೇಕು. ಹೃದಯದ ಸಾಂತ್ವಾನಕೆ ಸ್ನೇಹದ ಕೈ ಕುಲುಕುವಿಕೆ ಬೇಕು. ಪತಿಯನ್ನು ಪ್ರತಿ ದಿನವೂ ಕೆರಳಿಸಲಾಗದೆ, ಅರಳಿಸಲಾಗದೆ, ಸಮಾಧಾನಿಸಲಾಗದ ಹೆಂಡತಿಯ ಸಂಕಟಕೆ ಸ್ನೇಹಿತೆ ಬೇಕು. ಆಕೆಯೊಡನಾಡುವ ನಾಕಾರು ಮಾತುಗಳು, ಹೊಸ ಪಾಕದ ಪಾಠ, ತವರು, ನೆಂಟರಿಷ್ಟರ ಮನೆ, ಕಾರ್ಯಕ್ರಮ, ಸಂಭ್ರಮ ನಲಿವು , ಧಾರಾವಾಹಿಯ ಕಂತುಗಳ ಕುರಿತ ವಿಮರ್ಶೆ, ಬಿರುಸಾಗಿ ಪಾರ್ಕುಗಳಲ್ಲಿ ಒಂದರ್ಧ ಗಂಟೆ ಸುತ್ತಾಡುವ ಸ್ವಾತಂತ್ಯ್ರ ಮತ್ತೆ ಇವೆಲ್ಲವೂ ಅವಶ್ಯ ಬೇಕು.        ಪ್ರತಿ ದಿನವೂ ಕೈ ಗಾಡಿಯಲಿ ಸೊಪ್ಪು ತರಕಾರಿ ಹಣ್ಣುಗಳನ್ನಿಟ್ಟುಕೊಂಡು ಕುಳಿತಿರುತ್ತಿದ್ದ ಅಜ್ಜನೋ, ಯುವಕನೋ, ಅಕ್ಕ – ತಂಗಿಯಂತಹವರೋ ತಮ್ಮತಮ್ಮ ಊರದಾರಿ ಹಿಡಿದಿದ್ದಾರೆ. ಅವರಿಗಲ್ಲಿ ಏನಾಗಿದೆಯೋ..? ಪ್ರತಿದಿನದ ಒಂದು ಸಣ್ಣ ನಗೆಯ ವಿನಿಮಯ ಈಗ ಕಡಿತಗೊಂಡಿದೆ. ಮೊಬೈಲ್ ನಂಬರೂ ಪಡೆದಿಲ್ಲ. ದಿನಂಪ್ರತಿ ಸಿಗುವ ಭರವಸೆಯಿದ್ದಾಗ ಮೊಬೈಲ್ ನಂಬರ್ ಪಡೆದು ದೂರಕರೆ ಮಾಡುವ ಜರೂರೇನಿತ್ತು?           ವಾರಕ್ಕೊಮ್ಮೆ ಹೆಚ್ಚು ಖಾರ, ಈರುಳ್ಳಿ, ಕ್ಯಾರೆಟ್ಟು ಹಾಕಿಸಿಕೊಂಡು ತಿನ್ನುತ್ತಿದ್ದ ಮೈಸೂರು ಚುರುಮುರಿಯವನ ಗಾಡಿಯ ಸದ್ದು ಈಗ ಅಡಗಿ ಹೋಗಿದೆ.     ದಿನಪತ್ರಿಕೆಗಳ ಜೊತೆಗೆ ಬರುತ್ತಿರುವ ಜಾಹೀರಾತುಗಳಲ್ಲಿ ಒಂದು ಕರೆ ಮಾಡಿದರೆ ಸಾಕು ಅರ್ಧ ಗಂಟೆಯೊಳಗೆ ನೀವು ಬಯಸಿದ್ದೆಲ್ಲಾ ಮನೆ ಬಾಗಿಲಿಗೆ ಬಂದು ಡೆಲಿವರಿಯಾಗುತ್ತದೆ ಎಂಬುದನ್ನು ನೋಡೀ ನೋಡೀ ಸಾಕಾಗಿದೆ.      ಮನೆಗೆ ಸ್ನೇಹಿತರನ್ನೂ ಬಂಧುಗಳನ್ನೂ ಆರ್ಡರ್ ಮಾಡಿಸಿ ತರಿಸಿಕೊಳ್ಳಬಹುದೇ….?! ಕಾಲ ಇಷ್ಟು ನಿರ್ದಯಿಯಾಗಿ ಹೀಗೆ ಎಲ್ಲವನ್ನೂ ಕಡಿತ ಮಾಡಬಾರದಿತ್ತು… ನಿಜ, ಆದರೆ ಈಗ ಭರವಸೆಯ ಹೊರತು ಬೇರೇನೂ ಉಳಿದಿಲ್ಲ.  *******************************************

ಭರವಸೆಯ ಹೊರತು ಬೇರೇನೂ ಉಳಿದಿಲ್ಲ’ Read Post »

ಕಾವ್ಯಯಾನ

ಕಾದಿಹೆ ಬಂದುಬಿಡು

ಕವಿತೆ ಕಾದಿಹೆ ಬಂದುಬಿಡು ಪ್ರೇಮಾ ಟಿ.ಎಂ. ಆರ್ ನಡೆದಿದ್ದೇನೆ ದಂಡೆಯುದ್ದಕ್ಕೆಹೆದ್ದೆರೆಗಳಬ್ಬರದ ಭಯ ಬಂದುಬಿಡುಸೊಕ್ಕಿದಲೆ ನನ್ನ ಕೊಚ್ಚಿಕೊಂಡೊಯ್ಯುವ ಮೊದಲೇ ಬಂದುಬಿಡು ಮೋಡ ಮುಕ್ಕಿದ ತುಂಡು ಸೂರ್ಯದ್ವಾದಶಿಯ ಮುರುಕು ಚಂದ್ರಎದುರುಬದುರು ನಿಂತಿರುವಾಗಲೇಬಂದುಬಿಡು ನನ್ನಹೆಜ್ಜೆಯ ಹೊಂಡದೊಳಗೆಉಪ್ಪುನೀರು ನೆಲೆನಿಂತಿದೆಅಲೆಯೊಳಗೆ ನಾಸುಳಿದು ಹೋಗುವ ಮುನ್ನಬಂದುಬಿಡು ಪಶ್ಚಿಮದಂಚಿಗೆ ಕೆನ್ನೆತ್ತರದ ಹಸೆಮುಗಿಲು ಹಾಡು ಹರಿಯುತಿದೆಕನಸು ಕೆನೆಗಟ್ಟುವದಕ್ಕೂ ಮೊದಲೇಬಂದುಬಿಡು ಸೂರ್ಯ ತಲೆಮರೆಸಿಕೊಳ್ಳುತ್ತಿದ್ದಾನೆತಾರೆಗಳೆದೆಗೆ ಸೊಕ್ಕು ಹೊಕ್ಕಿದೆದಂಡೆ ಮೌನವ ಹೊದ್ದು ಮಲಗುವ ಮುಂಚೆಬಂದುಬಿಡು ಇರುಳು ಜಾರುತಿದೆ ಮುಷ್ಠಿಯೊಳಗಿನ ಮರಳಂತೆ ಸುಳುಸುಳುಕನಸು ಕರಗುವ ಮೊದಲೇ ಮಧುಶಾಲೆಬಿಟ್ಟುಬಂದುಬಿಡು ಎಲ್ಲೋ ಗಾಳಿ ಮರದಮೇಲೆಒಂಟಿಹಕ್ಕಿಯ ಎದೆಕೊರೆವ ಹಾಡುತಟ್ಟಿ ಮಲಗಿಸುತ್ತದೆ ಕಡಲು ದಂಡೆಯಪಮ್ಮಿ ಕಾದು ಕೂತಿದ್ದಾಳೆ ಬಂದುಬಿಡಿ **************************

ಕಾದಿಹೆ ಬಂದುಬಿಡು Read Post »

ಕಥಾಗುಚ್ಛ

ಬದಲಾವಣೆ

ಕಥೆ ವಿಜಯಶ್ರೀ ಹಾಲಾಡಿಯವರ ಹೊಸ ಕತೆ ಬದಲಾವಣೆ ಕುದಿಸಿ ಆರಿಸಿದ ನೀರಿಗೆ ತಂಪಿನ ಬೀಜವನ್ನು ಹಾಕಿ ರುಚಿಗೊಂಚೂರು ಬೆಲ್ಲ ಸೇರಿಸಿ ಚಮಚದಲ್ಲಿ ಕಲಕುತ್ತ ಕುಳಿತಿದ್ದಾಳೆ ಜುಬೇದಾ. ಫ್ಯಾನ್ ತಿರುಗುತ್ತಿದ್ದರೂ ಸೆಖೆಯೇನೂ ಕಮ್ಮಿಯಿಲ್ಲ, ಅಲ್ಲದೇ ಫ್ಯಾನಿಂದ ಬರುವುದೂ ಬಿಸಿಗಾಳಿಯೇ: ಏನೂ ಸುಖವಿಲ್ಲ. “ನೀನು ಕೆಲಸ ಎಂತ ಮಾಡುವುದು ಬೇಡ, ಸುಮ್ಮನೇ ರೆಸ್ಟ್ ತಕೋ. ಹೊತ್ತುಹೊತ್ತಿಗೆ ಸರಿಯಾಗಿ ತಿನ್ನು. ಪುನಃ ಆಸ್ಪತ್ರೆ ಸೇರಿದರೆ ನನ್ನಿಂದಾಗಲಿಕ್ಕಿಲ್ಲ” ಬೆಳಿಗ್ಗೆ ಅಂಗಡಿಗೆ ಹೋಗುವ ಮುಂಚೆ ಎಚ್ಚರಿಸಿ ಹೋಗಿದ್ದಾನೆ ರಹೀಮ. ಅದಲ್ಲದೆ “ಉಮ್ಮ, ನೀವು ಪೂರ್ತಿ ಗುಣವಾಗುವವರೆಗೆ ನಾನು ಕಾಲೇಜಿಂದ ಇಲ್ಲಿಗೇ ಬರುತ್ತೇನೆ. ಮತ್ತೆ ಅಕ್ಷಯನ ಹತ್ತಿರ ಹೋಗಬೇಕು ನಾನು. ಪಾಪ ಅಲ್ಲಿ ಅವನು ಒಬ್ಬನೇ ಆಗಿದ್ದಾನೆ” ಅನ್ವರ ಹೇಳಿದ್ದು ನೆನಪಾದಾಗ ಕಣ್ಣೀರು ಬರುವಂತಾಗಿ ತಟಕ್ಕನೇ ತಡೆಯಲು ಯತ್ನಿಸಿದಳು. “ಆಗದ್ದು ಹೋಗದ್ದು ಎಲ್ಲ ಯೋಚನೆ ಮಾಡುತ್ತ ಕುಳಿತದ್ದಕ್ಕೇ ಹುಷಾರಿಲ್ಲದೆ ಆಗುವುದು ನಿನಗೆ. ಸ್ವಲ್ಪ ನೆಮ್ಮದಿಯಾಗಿ ಇರು ನೋಡುವಾ ಮನೆಯಲ್ಲಿ” ಮೂರು ದಿನ ಆಸ್ಪತ್ರೆಯಲ್ಲಿದ್ದು ಡಿಸ್ಚರ್ಜ್ ಆಗಿ ಮನೆಗೆ ಬಂದ ಕೂಡಲೇ ರಹೀಮ ಹೇಳಿದ ಮಾತು. ತಾನೇನು ಬೇಕಂತ ಮಾಡಿಕೊಂಡಿದ್ದೇನ ಇದೆಲ್ಲ: ಹುಷಾರಿಲ್ಲದೆ ಹಾಸಿಗೆ ಹಿಡಿಯುವುದು ಯಾರಿಗಾದರೂ ಆಸೆಯಾ? “ಕರಾವಳಿಯ ಹವೆ ನಿಮಗೆ ಹಿಡಿಯುವುದಿಲ್ಲ ಅಮ್ಮ” ಅಂತ ಡಾಕ್ಟರ್ ಹೇಳಲಿಲ್ಲವಾ? ಮೊನ್ನೆ ಸ್ವಲ್ಪ ಟೆನ್ಷನ್ ಮಾಡಿಕೊಂಡದ್ದು ಹೌದು. ನಿಂತ ನೆಲವೇ ಕುಸಿದು ಬೀಳುತ್ತದೆ ಅನ್ನುವಾಗ ಯಾರಿಗಾದರೂ ಯೋಚನೆಯಾಗುವುದಿಲ್ಲವಾ? ಅನ್ವರ ಕೂಡಾ ಮನೆಬಿಟ್ಟು ಹೋಗಿದ್ದಾನೆ. ಹೊರಗಡೆ ಒಂದು ತರಕಾರಿ ತಕೊಳ್ಳುವ ಅಂತ ಹೋದರೂ ನಮ್ಮಂತವರ ಕಿವಿಗೆ ಬೀಳಬೇಕೆಂದೇ ಕೆಲವು ನಂಜಿನ ನಾಲಗೆಯವರು ಹೇಳುವುದು ಕೇಳುತ್ತದೆ. “ಈ ಸಾಯ್ಬರನ್ನೆಲ್ಲ ಪಾಕಿಸ್ತಾನಕ್ಕೆ ಓಡಿಸಬೇಕು ಮೊದಲು. ಆಗ ಎಲ್ಲವೂ ಸರಿಯಾಗುತ್ತದೆ” ಯಾ ಅಲ್ಲಾಹ್! ಎಂತಾ ಮಾತು! ನಾವು ಹೋಗುವುದಾದರೂ ಎಲ್ಲಿಗಂತ ಬೇಕಲ್ಲಾ. ಯಾವ ಕಾಲದಿಂದಲೂ ಇಲ್ಲಿಯೇ ಇದ್ದವರಲ್ವಾ ನಾವು…. ಈಗ ಹೋಗಿ, ಹೋಗಿ ಅಂತ ಹಂಗಿಸಿದರೆ….ಅದೂ ಅಲ್ಲದೆ ಆರಕ್ಕೇರದ ಮೂರಕ್ಕಿಳಿಯದ ನಮ್ಮಂತವರೆಲ್ಲ ಎಲ್ಲಿಗೋ ಹೋಗಿ ಹೇಗೆ ಬದುಕುವುದು? ದೊಡ್ಡ ದೊಡ್ಡ ದುಡ್ಡಿನವರಾದರೂ ಎದ್ದುಕೊಂಡು ಎಲ್ಲಿಗಾದರೂ ಹೋಗಿ ಜೀವನ ತೆಗೆದಾರು. ಛೇ, ಮೊದಲೆಲ್ಲ ಹೀಗಿರಲಿಲ್ಲಪ್ಪ. ನಾವೇ ಎಲ್ಲದರಲ್ಲೂ ತಗ್ಗಿ ನಡೆಯುತ್ತಿದ್ದುದು ಹೌದು: ಆದರೆ ಇಷ್ಟೆಲ್ಲ ಭಂಗ ಇರಲಿಲ್ಲ. ಈಗ ಸುಮಾರು ಆರೇಳು ವರ್ಷದಿಂದ ನಿಧಾನಕ್ಕೆ ಕುದಿಯುತ್ತಾ ಬಂದಿದೆ ವಾತಾವರಣ: ಈಗಂತೂ  ಸಿಡಿದೇ ಬಿಟ್ಟಿದೆ. ಮುಂದೆ ಹೇಗೋ ಏನೋ… ಯಾರಿಗೆ ಗೊತ್ತು!          ಒಂದೆರಡು ಹಣ್ಣಿನ ಹೋಳು, ಹಿಡಿ ಗಂಜಿ ತಿಂದು ರೂಮಿಗೆ ಬಂದು ಕುಳಿತಳು ಜುಬೇದಾ. ನಿಶ್ಶಕ್ತಿ ಕಮ್ಮಿಯಾಗಲು ಇನ್ನೊಂದು ವಾರವಾದರೂ ಬೇಕು. ಅದಲ್ಲದೆ ತಲೆತಿರುಗಿ ಬಿದ್ದು ಮಂಡೆ ಮಂಚಕ್ಕೆ ಜಪ್ಪಿ ಆದ ಗಾಯದ ನೋವು ಬೇರೆ. ಇತ್ತೀಚೆಗೆ ಸುಮಾರು ಸಮಯವಾಗಿತ್ತು ಸರಿಯಾಗಿ ಊಟವೇ ಸೇರದೆ. ಯಾವುದೂ ಬೇಡ ಅಂತಾಗಿದೆ ಅವಳಿಗೆ. ಟಿ.ವಿಯಲ್ಲಿ ತೋರಿಸುವ ವಿಧ ವಿಧ ವಾರ್ತೆಗಳು ಸುಮ್ಮನೇ ತಲೆಬಿಸಿ ಮಾಡುತ್ತವೆ. ‘ಪೌರತ್ವ ತಿದ್ದುಪಡಿ ಕಾಯ್ದೆ ಬರುತ್ತದೆ’ ಅಂತ ಆವತ್ತಿಂದ ಹೇಳುತ್ತಲೇ ಇದ್ದಾರೆ. ಅನ್ವರ, ಅಕ್ಷಯ ಕೂಡಾ ಇದನ್ನು ಮಾತಾಡುತ್ತಿದ್ದರು. ಆದರೆ ಟಿ.ವಿಯವರ ಬೊಬ್ಬೆ ಯಾವಾಗಲೂ ಇದ್ದದ್ದೇ. ಸತ್ಯ ಹೇಳುತ್ತಾರ, ಸುಳ್ಳು ಹೇಳುತ್ತಾರ ಒಂದೂ ತಿಳಿಯುವುದಿಲ್ಲ. ಈಗೀಗ ಅವರು ಸತ್ಯವೇ ತೋರಿಸಿದರೂ ನಮಗೆ ಸಂಶಯ ಬರುತ್ತದೆ. ಮನೆಕೆಲಸ ಮುಗಿದ ನಂತರ ವಾಟ್ಸಪ್ ನೋಡುವುದುಂಟು ಅವಳು. ಆದರೆ “ಅದರಲ್ಲಿ ಬರುವುದನ್ನೆಲ್ಲ ನಂಬಬೇಡಿ ಉಮ್ಮಾ, ಅಲ್ಲೂ ಹೆಚ್ಚಿನವೆಲ್ಲ ಸುಳ್ಳೇ ಇರುವುದು” ಅಂತ ಪದೇ ಪದೇ ಎಚ್ಚರಿಸುತ್ತಾನೆ ಅನ್ವರ. ಅದೂ ನಿಜವೇ, ಈಗೀಗಂತೂ ಅವರನ್ನು ಇವರು ಬಯ್ಯುವುದು, ಇವರನ್ನು ಅವರು ಬಯ್ಯುವುದು…ಇದೇ ಆಯಿತು ಜನಗಳದ್ದು. ಮೊನ್ನೆ ಒಂದು ಮೆಸೆಜ್ ಹಾಕಿದ್ದರು ಯಾರೋ “ಮುಸ್ಲಿಮರು ಜಾತ್ರೆಯಲ್ಲಿ ಮಜ್ಜಿಗೆ ವ್ಯವಸ್ಥೆ ಮಾಡಿದ್ದಾರೆ, ಅದನ್ನು ಕುಡಿಯಬೇಡಿ. ಮಕ್ಕಳಾಗದ ಹಾಗೆ ಔಷಧ ಹಾಕಿರುತ್ತಾರೆ ಅದರಲ್ಲಿ. ಅವರು ಕೊಟ್ಟದ್ದು ಏನೂ ತಿನ್ನಬೇಡಿ”. ಯಾ ಅಲ್ಲಾ! ಒಂದು ಒಳ್ಳೆಯ ಕೆಲಸವನ್ನೂ ಜನರು ಹೀಗೆ ಮಾತಾಡುತ್ತಾರೆಂದರೆ! ಇನ್ನೊಬ್ಬರು ವಾಟ್ಸಪ್ಪಲ್ಲಿ ಬಣ್ಣ ಬಣ್ಣ ಚಿತ್ರದೊಟ್ಟಿಗೆ ಹಾಕುವುದು…” ಮುಸ್ಲಿಮರ ಅಂಗಡಿಗಳಿಗೆ ಹೋಗಬೇಡಿ. ಅವರಿಗೆ ಯಾಕೆ ವ್ಯಾಪಾರ ಮಾಡಿಕೊಡುತ್ತೀರಿ? ಹಿಂದೂಗಳ ಅಂಗಡಿಯಲ್ಲೇ ಎಲ್ಲವನ್ನೂ ಖರೀದಿಸಿ. ಯಾರ್ಯಾರದ್ದೋ ಹೊಟ್ಟೆ ತುಂಬಿಸಿದ್ದು ಸಾಕು ನಾವು”. ಇಷ್ಟು ದ್ವೇಷ ಯಾಕೆ ಜನರಿಗೆ ಅಂತ ಅರ್ಥ ಆಗುವುದಿಲ್ಲ. ರಹೀಮನೂ ಹೇಳುತ್ತಿರುತ್ತಾನೆ “ಈಗ ವ್ಯಾಪಾರ ಪೂರಾ ಡಲ್” ಅಂತ. ಹೋಗಲಿ, ವ್ಯಾಪಾರದ ಮನೆ ಹಾಳಾಗಿ ಹೋಗಲಿ ಅನ್ನುವ ಅಂದರೆ ನೆರೆಕರೆ ಮನುಷ್ಯರ ಪ್ರೀತಿ, ವಿಶ್ವಾಸವೂ ರಂಪವಾಗಿ ಹೋಯಿತಲ್ಲ..ಜಾಹ್ನವಿ ಸರಿಯಾಗಿ ಮುಖ ನೋಡಿ ಮಾತಾಡಿ ಯಾವ ಕಾಲವಾಯಿತು!     ಎರಡು ತಿಂಗಳ ಹಿಂದೆ ನಡೆದದ್ದು ಈಗ ಎಣಿಸಿದರೂ ಮೈ ಕೊಡಕುತ್ತದೆ ಜುಬೇದಾಳಿಗೆ. ‘ಪೌರತ್ವ ತಿದ್ದುಪಡಿ ಕಾಯ್ದೆ’ ಬಂದರೆ ಭಾರೀ ಕಷ್ಟವಾಗುತ್ತದೆ. ತುಂಬಾ ದಾಖಲೆ ಕೇಳುತ್ತಾರೆ. ನಾವು ಹುಟ್ಟಿದ ಪ್ರಮಾಣ ಪತ್ರದಿಂದ ಹಿಡಿದು ನಮ್ಮ ಅಪ್ಪ ಅಮ್ಮನ ಹುಟ್ಟಿನ ದಾಖಲೆಯೂ ಬೇಕಾಗುತ್ತದೆ, ಆ ಸರ್ಟಿಫಿಕೇಟ್ ಎಲ್ಲ ಎಲ್ಲಿದೆ ನಮ್ಮ ಹತ್ತಿರ? ತೊಂದರೆಯಾಗಲಿಕ್ಕುಂಟು ಮುಂದೆ” ಎಂಬಂತಹ ಭಾಷಣಗಳು ಕಾಯ್ದೆಯ ವಿರುದ್ದ ಪ್ರತಿಭಟನೆಗಳು ಎಲ್ಲ ಆಯಿತು. ಆವತ್ತು ಭಾಬಿ ದೂರದ ದೆಹಲಿಯಿಂದ ಫೋನ್ ಮಾಡಿದ್ದರು. “ಜುಬೇದಾ, ಇಲ್ಲಿ ಬೆಳಗಾದರೆ ಹೇಗೋ ಏನೋ ಅಂಬಂತಹಾ ದಿನಗಳು ಬಂದಿವೆ. ಯೂನಿವರ್ಸಿಟಿಯಲ್ಲಿ ಓದುವ ಪಾಪದ ವಿದ್ಯಾರ್ಥಿಗಳಿಗೂ ಬಡಿದಿದ್ದಾರೆ. ನಿಮ್ಮಲ್ಲೂ ಶುರುವಾಗಬಹುದು, ನೀವಿರುವ ಪ್ರದೇಶ ಭಾರಿ ಸೂಕ್ಷ್ಮ  ಅಲ್ಲವಾ..ಜಾಗ್ರತೆಯಾಗಿರಿ”. ಆದರೆ ಕಡೆಗೆ ಅದದ್ದೇನು? ಇಷ್ಟೆಲ್ಲ ಹೇಳಿದ ಬಾಬಿಯ ಕಾಕನ ಮಗ ಅಶ್ರಫನೇ ಗೋಲಿಬಾರಿನಲ್ಲಿ ಪೋಲೀಸರ ಗುಂಡಿಗೆ ಸತ್ತುಹೋದ. ಜಿಲ್ಲಾ ಕೇಂದ್ರ ಇರುವುದು ನಮ್ಮಲ್ಲಿಂದ ಮೂವತ್ತು ಕಿಲೋಮೀಟರ್ ದೂರದಲ್ಲಿ. ಮೊದಲೇ ಕೋಮುಗಲಭೆಯ ಬಿಸಿಯಲ್ಲೇ ಇರುವ ಜಾಗ. ಈಗಂತೂ ಕೆಂಜಿರುವೆ ಕೊಟ್ಟೆಗೆ ಕಲ್ಲು ಹಾಕಿದ ಹಾಗಾಯ್ತು. ಬಾಬಿ ಫೋನ್ ಮಾಡಿದ ವಾರದೊಳಗೇ ಹೀಗೆಲ್ಲ ಆಯ್ತು. ಇಡೀ ಪೇಟೆಯೇ ಒಂದು ವಾರ ಬಂದಾಗಿ ಹೋಯ್ತು. ಜನರು ಹೆದರಿ ಮನೆ ಹೊರಗೆ ಕಾಲು ಹಾಕಲಿಲ್ಲ. ಅಶ್ರಫ್ ಮೂರು ಜನ ತಂಗಿಯರ ಮದುವೆ ಜವಾಬ್ದಾರಿ ಹೊತ್ತಿದ್ದ ಬೇಟಾ. ಅವನ ಉಮ್ಮ, ಬಾಪ್ಪರಿಗೆ ಪ್ರಾಯ ಆಗಿದೆ, ಆರೋಗ್ಯವೂ ಒಳ್ಳೆದಿಲ್ಲ…ಯಾವ ಕೆಲಸವೂ ಅವರಿಂದ ಸಾಗುವುದಿಲ್ಲ. ವಿಷಯ ಕೇಳಿದ ದಿನ ಬಾಬಿ ತುಂಬಾ ಅತ್ತರು. “ಎಳೆಮಕ್ಕಳು ಹೀಗೆ ಸತ್ತರೆ ನೋಡಿಕೊಂಡು ಇರುವುದು ಹೇಗೆ ನಾವು, ಇದು ದೊಡ್ಡ ಅನ್ಯಾಯ. ಪಾಪದವರನ್ನು ಕೇಳುವವರು ಯಾರೂ ಇಲ್ಲವಾ ಹಾಗಾದರೆ” ಅಂತ. ಅಶ್ರಫನ ಅಪ್ಪ ಅಮ್ಮನಂತೂ ಹೆದರಿಹೋಗಿದ್ದರಂತೆ. ” ಇನ್ನು ನಾವಿಲ್ಲಿ ಇರುವುದಿಲ್ಲ, ನೀನೇ ಕರೆದುಕೊಂಡು ಹೋಗು. ಅಲ್ಲೇ ದೆಹಲಿಯಲ್ಲೇ ರಸ್ತೆ ಬದಿ ಯಾವುದಾದರೂ ವ್ಯಾಪಾರ ಮಾಡಿಕೊಂಡು ಗಂಜಿಯಾದರೂ ತಿನ್ನುತ್ತೇವೆ. ನಮ್ಮ ಬೇಟನನ್ನು ಕೊಂದ ಈ ಊರು ನಮಗೆ ಬೇಡ” ಎಂದು ಹಟ ಹಿಡಿದು ಕೂತರಂತೆ. ಕಡೆಗೆ ಬಾಬ್ಬಿಯೇ ಅವರ ಸಂಸಾರವನ್ನು ದಿಲ್ಲಿಗೆ ಕರೆದೊಯ್ದರು….ಛೇ ಮೂರ್ನಾಲ್ಕು ತಿಂಗಳಲ್ಲಿ ಪರಿಸ್ಥಿತಿಯೇ ಬದಲಾಗಿಹೋಯಿತು. ಆ ದಿನ ಅನ್ವರ, ಅಕ್ಷಯ ಇಬ್ಬರೂ ಹೊರಟಿದ್ದರು ಅಶ್ರಫನ ಕೊನೆ ಮುಖ ನೋಡಲಿಕ್ಕೆ. ಆದರೆ ಅಕ್ಷಯನ ಅಮ್ಮ ಜಾಹ್ನವಿ ಅವನು ಹೋಗುವುದು ಬೇಡ ಎಂದು ತಡೆದರಂತೆ. “ಆಂಟೀ ಮೊದಲಾಗಿದ್ದರೆ ನೀವಾದರೂ ಒಂದು ಮಾತು ಹೇಳಿ ಅನ್ನಬಹುದಿತ್ತು. ಈಗ ನಿಮ್ಮಲ್ಲಿ ಮಾತೇ ಆಡುವುದಿಲ್ಲವಲ್ಲ ಅಮ್ಮ, ಏನಾಗಿದೆಯೋ ಗೊತ್ತಾಗುತ್ತಿಲ್ಲ ಅವರಿಗೆ. ಹೇಳಿಕೊಟ್ಟವರ ಮಾತು ಕೇಳಿ ಹೀಗಾದದ್ದು ನನ್ನಮ್ಮ” ಅಕ್ಷಯ ಸಿಟ್ಟಿನಲ್ಲಿ ಹೇಳಿದ್ದ. ಹೌದು, ಜಾಹ್ನವಿ ಯಾಕೆ ಹೀಗಾದರು? ಮೊದಲೆಲ್ಲ ಎರಡು ಮನೆಗಳ ನಡುವೆ ಕಂಪೌಂಡೇ ಇಲ್ಲ ಎಂಬ ಭಾವನೆ ಬರುತ್ತಿತ್ತು. ಈಗ ತಲೆಯೆತ್ತಿ ಅವರ ಮನೆ ಬಾಗಿಲು ದಿಟ್ಟಿಸಲೂ ಒಂತರಾ ಆಗುತ್ತದೆ. ಮನಸ್ಸಲ್ಲಿ ಇಷ್ಟೆಲ್ಲ ಯೋಚನೆಯಾದರೂ “ಹೋಗಲಿ ಮಗಾ, ಪಾಪ ಜಾಹ್ನವಿಯಕ್ಕ ಕೆಟ್ಟವರೇನಲ್ಲ, ಯಾಕೊ ಈಗೀಗ ನಮ್ಮನ್ನು ಕಂಡರೆ ಬೇಸರ ಅವರಿಗೆ. ನಾವು ಯಾರಿಗೂ ಬೇಡದವರಲ್ವಾ, ಅದಕ್ಕೇ ಹಾಗೆ” ಅಂದಿದ್ದಳು. “ನೀವು ತಲೆಬಿಸಿ ಮಾಡಬೇಡಿ ಆಂಟಿ. ಅಮ್ಮನನ್ನು ನಾನು ಸರಿಮಾಡುತ್ತೇನೆ. ನೀವು ಆರಾಮಿರಿ” ಎಷ್ಟು ಒಳ್ಳೆಯ ಹುಡುಗ ಅಕ್ಷಯ! ಅನ್ವರನ ಹಾಗೇ ಅವನನ್ನೂ ಮಗನಂತೆಯೇ ನೋಡಿಕೊಂಡದ್ದಲ್ವಾ ಸಣ್ಣದಿರುವಾಗ..ಆಗ ಕಾಲವೇ ಬೇರೆಯಿತ್ತು. ಜಾಹ್ನವಿಯಾಗಲಿ, ಅವರ ಗಂಡ ಸುರೇಶಣ್ಣನಾಗಲೀ ‘ಇವರು ಯಾರೋ ಮೂರನೆಯವರು’ ಅಂತ ತಮ್ಮನ್ನು ಕಂಡದ್ದೇ ಇಲ್ಲ. ನಮ್ಮ ಜುಬೇದಾ, ನಮ್ಮ ರಹೀಮ, ನಮ್ಮ ಅನ್ವರ್ ಎಂಬ ಮಾತೇ ಬರುತ್ತಿದ್ದುದು ಅವರ ಬಾಯಿಂದ. ಸುರೇಶಣ್ಣ ಹೆಚ್ಚುಕಮ್ಮಿ ಮೊದಲಿನ ಹಾಗೇ ಇದ್ದಾರೆ.  ಆದರೆ ಹೆಂಡತಿಯ ಮಾತು ಮೀರಲು ಆಗುವುದಿಲ್ಲ ಕಾಣುತ್ತದೆ ಅವರಿಗೆ. ಜಾಹ್ನವಿ ದೀದಿಗೆ ಬ್ಯಾಂಕಿನಲ್ಲಿ ಕೆಲಸವಾದರೆ, ಸುರೇಶಣ್ಣಂಗೆ ಎಲ್ ಐ ಸಿಯಲ್ಲಿ. ಅಕ್ಷಯನಿಗೆ ಐದು ವರ್ಷವಾಗುವವರೆಗೆ ಸುರೇಶಣ್ಣನ ಅಮ್ಮ ಇದ್ದರು ಮಗನ ಜೊತೆಗೆ.. ಕಡೆಗೆ ” ಮಗು ಶಾಲೆಗೆ ಹೋಗಲು ಸುರುಮಾಡಿತಲ್ಲ, ನಾನು ಊರಿಗೆ ಹೋಗುತ್ತೇನೆ” ಎಂದು ಅವರು ಹೊರಟುಹೋದ ನಂತರ ಅಷ್ಟು ಸಣ್ಣ ಮಗುವನ್ನು ನೋಡಿಕೊಳ್ಳುವವರಿಲ್ಲದೆ ಜಾಹ್ನವಿ ಭಂಗ ಬರುತ್ತಿರುವಾಗ “ನೀವೇನೂ ಯೋಚನೆ ಮಾಡಬೇಡಿ ದೀದಿ, ನಾನು ನೋಡಿಕೊಳ್ಳುತ್ತೇನೆ” ಅಂದದ್ದು ತಾನು. ಹಾಗೆ ಅಕ್ಷಯ ಮತ್ತು ಅನ್ವರ ಒಟ್ಟಿಗೆ ಆಟವಾಡುತ್ತಾ ದೊಡ್ಡದಾದದ್ದಲ್ವಾ…ಪ್ರಾಯವೂ ಹೆಚ್ಚು ಕಮ್ಮಿ ಒಂದೇ. ಅಕ್ಷಯ ಒಂದು ವರ್ಷಕ್ಕೆ ದೊಡ್ಡವನು ಅಷ್ಟೇ. ಮಕ್ಕಳಿಗೆ ಹಗಲುಹೊತ್ತಿನ ಊಟ ತಿಂಡಿ ಎಲ್ಲ ತಮ್ಮ ಮನೆಯಲ್ಲೇ ಆಗುತ್ತಿತ್ತು. ರಾತ್ರಿ ಮಾತ್ರ ಬಿಸಿಬಿಸಿಯಾಗಿ ಮಾಡಿದ ಅಡುಗೆಯನ್ನು ಬುತ್ತಿಪಾತ್ರದಲ್ಲಿ ಹಾಕಿ ತಮಗೂ ತಂದುಕೊಟ್ಟರೇ ಸಮಾಧಾನ ಆಗುತ್ತಿದ್ದುದು ಜಾಹ್ನವಿಗೆ. “ಆ ಜಾತಿ ಈ ಜಾತಿ ಮಣ್ಣು ಮಸಿ ಎಲ್ಲ ಸುಮ್ಮನೇ ಜುಬೇದಕ್ಕಾ, ಮುಖ್ಯ ನಮ್ಮ ನೀತಿ ಸರಿಯಿರಬೇಕು’ ಎನ್ನುತ್ತಿದ್ದರಲ್ಲ ಜಾಹ್ನವಿ. ಸುರೇಶಣ್ಣನಂತೂ “ಜನಿವಾರ ಒಂದು ಎಲ್ಲೋ ಕಪಾಟಿನ ಮೂಲೆಯಲ್ಲಿರಬೇಕು. ಅಮ್ಮ ಬಂದಾಗ ಹಾಕಿಕೊಳ್ಳುವುದು: ಪಾಪ ಅವರಿಗೆ ಬೇಸರ ಆಗಬಾರದಲ್ವಾ. ಅವರು ಅತ್ತಮುಖ ಹೋದಕೂಡಲೇ ನನ್ನ ಜನಿವಾರದ ಸವಾರಿ ಕಪಾಟಿಗೆ ಓಡುತ್ತದೆ” ಹೇಳಿ ನಗಾಡಿದ್ದೆಷ್ಟು ಸಲ! ಹೀಗೇ ನಡೆಯುತ್ತಿತ್ತು ಎಲ್ಲ…ಆದರೆ ಇದೆಲ್ಲ ಹೇಗಾಯ್ತೋ ಗೊತ್ತಾಗುತ್ತಿಲ್ಲ. ಮೊದಮೊದಲು ಜಾಹ್ನವಿ ವ್ಯಂಗ್ಯ ಮಾಡುವುದು, ಸಿಟ್ಟು ತೋರಿಸುವುದು ಮಾಡತೊಡಗಿದರು. ಆಮೇಲಾಮೇಲೆ ಅವರ ಮನೆಗೆ ನಾವೆಲ್ಲ ಹೋಗುವುದೇ ಇಷ್ಟವಿಲ್ಲವೆಂಬಂತೆ ವರ್ತನೆ ಶುರುವಾಯಿತು. ಅವರಂತೂ ಈಚೆ ಬರುವುದೇ ನಿಂತುಹೋಯಿತು. ಈಗ ಸುಮಾರು ಒಂದು ವರ್ಷವೇ ಕಳೆಯಿತು: ತಾನಾಗಲೀ, ರಹೀಮನಾಗಲೀ ಆ ಮನೆಗೆ ಕಾಲಿಡದೆ. ಮಕ್ಕಳಿಬ್ಬರು ಮಾತ್ರ ಒಟ್ಟಿಗೇ ಕಾಲೇಜಿಗೆ ಹೋಗಿ ಬರುತ್ತವೆ. ಅವುಗಳನ್ನು ನೋಡಿದರೆ ಮುದ್ದು ಉಕ್ಕಿಬರುತ್ತದೆ. ಅಣ್ಣತಮ್ಮಂದಿರಾದರೂ ಇಷ್ಟು ಹಚ್ಚಿಕೊಳ್ಳಲಿಕ್ಕಿಲ್ಲ. ಅವುಗಳಾದರೂ ತಣ್ಣಗಿರಲಿ, ಈ ದ್ವೇಷದ ಉರಿ ಅವುಗಳಿಗೆ ಬೇಡ ಎಂದರೆ ಈಗೀಗ ಅದಕ್ಕೂ ಬಂದೋಬಸ್ತು ಸುರುವಾಗಿ ಅದೇ ವಿಕೋಪಕ್ಕೆ ಹೋಗಿ ಅಕ್ಷಯ, ಅನ್ವರ ಇಬ್ಬರೂ ಮನೆಬಿಟ್ಟು ಹೋಗಿದ್ದಾರೆ. ಕಂಡವರೆಲ್ಲ ಕೇಳುತ್ತಾರೆ “ನಿಮ್ಮ ಮಗ ಏನು ಬೇರೆ ಹೋಗಿ ಕೂತದ್ದು? ನಿಮ್ಮಲ್ಲಿ ಕೋಪ ಮಾಡಿ ಹೋದದ್ದಾ!” ಏನಂತ ಉತ್ತರ ಕೊಡುವುದೆಂದು ಅರ್ಥವಾಗುವುದಿಲ್ಲ ಜುಬೇದಾಳಿಗೆ. *** ನಡುರಾತ್ರಿ ಮೀರುತ್ತಿದೆ: ಗಾಢಕತ್ತಲು. ಅಲ್ಲೆಲ್ಲೋ ಮರಗಳೆಡೆಯಲ್ಲಿ ಜೀರುಂಡೆ ನಾದ. ರೂಮಿನ ಬಾಗಿಲು ತೆಗೆದು ಹೊರಗಿನ ದಂಡೆಯಲ್ಲಿ ಬಂದು ಕುಳಿತಿದ್ದಾನೆ ಅಕ್ಷಯ. ಓದಬೇಕೆಂದು ಪುಸ್ತಕ ಹಿಡಿದರೆ ಓದಲಾಗದೆ, ನಿದ್ದೆಮಾಡುವ ಅಂದುಕೊಂಡು ಅದೂ ಸಾಧ್ಯವಾಗದೆ ಎದ್ದುಬಂದಿದ್ದಾನೆ. ಕಾಲೇಜಿನಲ್ಲೂ ಆವತ್ತು ಯಾವುದರ ಮೇಲೂ ಗಮನ ಕೇಂದ್ರೀಕರಿಸಲಾಗಲಿಲ್ಲ. ಅನ್ವರ್ ಆಗಲೇ ಮಲಗಿಯಾಗಿದೆ. ಜುಬೇದಾ ಆಂಟಿಗೆ ಹುಷಾರಿಲ್ಲವೆಂದು ಮನೆಗೆ ಹೋಗಿದ್ದವನು ನಿನ್ನೆ ತಾನೇ ಬಂದಿದ್ದಾನೆ. ಪಾಪ, ನಿನ್ನೆ ರಾತ್ರಿ “ಉಮ್ಮ ಉಮ್ಮ”

ಬದಲಾವಣೆ Read Post »

ಇತರೆ

ಗುರುವಿನ ಋಣ

ಗುರುವಿನ ಋಣ ಜಯಶ್ರೀ ಜೆ.ಅಬ್ಬಿಗೇರಿ         ಆಗ ನಾನಿನ್ನೂ ಪುಟ್ಟ ಫ್ರಾಕು  ಧರಿಸಿ ಪುಟ್ಟ ಪುಟ್ಟ ಹೆಜ್ಜೆ ಇಡುತ್ತಿದ್ದ ಕಾಲ. ಸದಾ ನನ್ನ ಕೈಯಲ್ಲಿ ಬಿಳಿ ಚೌಕಟ್ಟಿನ ಕರಿ ಪಾಟಿ ಹಿಡಿದು, ಬೆರಳಲ್ಲಿ ಪೆನ್ಸಿಲ್ ಸಿಕ್ಕಿಸಿಕೊಂಡು ದೊಡ್ಡ ಪಂಡಿತರಂತೆ ಗಂಭಿರವಾಗಿ ಬರೆಯುವದನ್ನು ಕಂಡು ನನ್ನಪ್ಪ, ನಮ್ಮವ್ವ ಎಷ್ಟು ಶ್ಯಾನೆ ಅದಾಳ ನೋಡು ಎನ್ನುತ್ತ ಪ್ರೀತಿಯಿಂದ ಹಣೆಗೆ ಹೂ ಮುತ್ತನ್ನಿಕ್ಕಿ ಅಕ್ಷರವನ್ನು ತೀಡಿಸುತ್ತಿದ್ದರು.ಆಗಿನಿಂದ ನನ್ನ  ಅಕ್ಷರದ ಹುಚ್ಚು ಮತ್ತಷ್ಟು ಹೆಚ್ಚಿತು. ಅಣ್ಣನ ಜೊತೆ ನಾನೂ ಶಾಲೆಗೆ ಹೋಗಲೇಬೇಕು ಎಂಬ ಹಟಕ್ಕೆ ಮಣಿದು,  ನನ್ನ ಕಾಟ ತಾಳಲಾರದೇ ಅಪ್ಪ ನನ್ನ ಕಿರುಬೆರಳು ಹಿಡಿದು ಶಾಲೆಯ ಮೆಟ್ಟಿಲು ಹತ್ತಿಸಿದ್ದರು.         ಸಂಪೂರ್ಣ ಬಿಳಿವಸ್ತ್ರಧಾರಿಯಾಗಿ ಬಿಳಿ ಟೋಪಿ ಧರಿಸಿದ್ದ ಹೆಡ್ ಮಾಸ್ಟರ್ ನನ್ನನ್ನೇ ದಿಟ್ಟಿಸುತ್ತ ಬಲಗೈಯನ್ನು ತಲೆಯ ಮೇಲೆ ಹಾಯಿಸಿ ಎಡಗಿವಿಯ ತುದಿಯನ್ನು ಮುಟ್ಟಲು ಸೂಚಿಸಿದರು.ನನ್ನ ಬಲಗೈಗೆ ಎಡಗಿವಿ ತುದಿಯನ್ನು ಮುಟ್ಟಲಾಗಲಿಲ್ಲ. ನಿಮ್ಮ ಹುಡುಗಿಗೆ ಇನ್ನೂ 5 ವರ್ಷ 10 ತಿಂಗಳಾಗಿಲ್ಲ ಎಂದು ಕರಾರುವಕ್ಕಾಗಿ ನುಡಿದರು.ಅದಕ್ಕೆ ಅಪ್ಪ ಹೌದ್ರಿ ಸರ್ ಆದ್ರ ಇಕಿಗೆ ಕಲಿಯುವ ಹುಚ್ಚು ಬಾಳ ಐತಿ ಈಗಾಗಲೇ ಅಕ್ಷರ ಅಂಕಿ ಎಲ್ಲಾ ಕಲ್ತಾಳ ಅಂದ. ಹೆಡ್ ಮಾಸ್ಟರ್  ವಿಸ್ಮಯದಿಂದ ಹುಬ್ಬೇರಿಸಿ ನನ್ನ ಅಕ್ಷರ ಅಂಕಿ ಜ್ಞಾನವನ್ನು ನಾನಾ ರೀತಿಯಲ್ಲಿ ಪರೀಕ್ಷಿಸಿ, ಶಹಬ್ಬಾಸಗಿರಿ ಕೊಟ್ಟು, ಒಂದು ವರ್ಷ ಮೊದಲೇ ಹುಟ್ಟಿದ್ದೀನೆಂದು ದಾಖಲಿಸಿ, ಒಂದನೇ ಕ್ಲಾಸ್ ಕಡೆ ಬೊಟ್ಟು ಮಾಡಿದರು.        ಊರಿಗೊಂದೇ ಸರಕಾರಿ ಶಾಲೆ. ಊರಿನ ಎಲ್ಲ ವರ್ಗದ ಮಕ್ಕಳಿಗೆ ಅಲ್ಲಿಯೇ ಶಿಕ್ಷಣ. ಮೆಸ್ಟ್ರು ಎಲ್ಲರಿಗೂ ಕಂಪಲ್ಸರಿ  ಕಲಿಸಲೇಬೇಕೆಂದು ಹಟ ತೊಟ್ಟು ಆಲಸ್ಯತನ ತೋರಿದವರಿಗೆ ಬೆನ್ನಿನ ಮೇಲೆ ಕೋಲಿನಿಂದ ಬಾಸುಂದೆ ಮೂಡಿಸುತ್ತಿದ್ದರು.ಕೋಲಿನ ಭಯಕ್ಕೆ ಎಲ್ಲ ಮಕ್ಕಳು ಪುಸ್ತಕ ಮುಖದ ಮುಂದೆ ಹಿಡಿಯುತ್ತಿದ್ದರು. ಕೋಲಿನ ಸುದ್ದಿ ಮನೆಯಲ್ಲಿ ಹೇಳಿದರೆ ಬೋನಸ್ಸಾಗಿ ಅಲ್ಲಿಯೂ ಬೆತ್ತದ ರುಚಿ ನೋಡಬೇಕಿತ್ತು. ಹೀಗಾಗಿ ಓದು ಬರಹ ಅನಿವಾರ್ಯವಾಗಿತ್ತು.         ಊರ ಹೊರಗಿನ ದೊಡ್ಡ ಆಲದ ಮರದ ಕೆಳಗೆ ಶಿಸ್ತಿನ ಸಿಪಾಯಿಯಂತೆ ನಿಂತ ಗುರುಗಳು ಪದ್ಯ ಲೆಕ್ಕ ಕಲಿಸುತ್ತ, ಪ್ರಶ್ನೆ ಕೇಳಿದರೆ ನಾ ಮುಂದು ತಾ ಮುಂದು ಎಂದು ಉತ್ತರಿಸಿ, ಆಟದ ಪಿರಿಯಡ್ಗೆ ಬೆಲ್ ಹೊಡೆದ ತಕ್ಷಣ ಹೋ! ಎಂದು ಜೋರಾಗಿ ಕೂಗುತ್ತ ಮೈದಾನಕ್ಕೆ ಲಗ್ಗೆಯಿಟ್ಟು, ಮೈ ಕೈ ಜೊತೆಗೆ ಬಟ್ಟೆಗೂ ಕೆಂಪು ಮಣ್ಣು ಮೆತ್ತಿಸಿಕೊಳ್ಳುವದರಲ್ಲಿ ಎಲ್ಲಿಲ್ಲದ ಖುಷಿ. ರಾಷ್ಟ್ರೀಯ ಹಬ್ಬಗಳ ರಿಹರ್ಸಲ್ಲಿನಲ್ಲಿ ಗುರು ಬಳಗ ಪಡುವ ಶ್ರಮಕ್ಕೆ ಸೆಲ್ಯೂಟ್ ಹೊಡೆಯಬೇಕೆನಿಸುತ್ತಿತ್ತು. ಹಬ್ಬಗಳಂದು ಹಾಡು ಭಾಷಣ ರೂಪಕ ನಾಟಕಗಳಲ್ಲಿ ಭಾಗವಹಿಸಿ ಪೆಪ್ಪರಮೆಂಟ್ ಚೀಪುತ್ತ ಕುಣಿದು ಕುಪ್ಪಳಿಸುತ್ತಿದ್ದೆವು.              1ನೇ ಕ್ಲಾಸಿನಿಂದ 7ನೇ ಕ್ಲಾಸಿನವರೆಗೆ ಫುಲ್ ಸಿಲ್ಯಾಬಸ್ನ್ನು ಹೋಲ್ ಸೇಲಾಗಿ ಒಬ್ಬರೇ ಗುರುಗಳು ಬೋಧಿಸುತ್ತಿದ್ದುದರಿಂದ ಅವರಿಗೆ ನಮ್ಮ ಶಕ್ತಿ ದೌರ್ಬಲ್ಯ ಪ್ರತಿಭೆಗಳು ಚೆನ್ನಾಗಿ ಗೊತ್ತಿರುತ್ತಿತ್ತು. ತಾಲೂಕಾ ಮಟ್ಟದಲ್ಲಿ ಅತ್ಯಧಿಕ ಪ್ರಶಸ್ತಿ ಪತ್ರ ಬಾಚಿಕೊಂಡು ಬಂದ ನನ್ನನ್ನು ಮೇಸ್ಟ್ರು ತಮ್ಮ ಕುಂಕಿಯ (ಹೆಗಲ) ಮೇಲೆ ಕೂಡ್ರಿಸಿಕೊಂಡು ಸಂಭ್ರಮಿಸುತ್ತ ಹೆಡ್ ಮಾಸ್ಟರ್ ಕಡೆಯಿಂದ 5 ಪೇನೆ(ಪೆನ್ಸಿಲ್) ಗಳನ್ನು ಬಹುಮಾನವಾಗಿ ಕೊಡಿಸಿದ್ದನ್ನು ನೆನೆದಾಗಲೊಮ್ಮೆ ಕಣ್ಣಲ್ಲಿ ನೀರು ಜಿನುಗುತ್ತೆ. ನಮ್ಮ ಕಲಿಕೆಯಲ್ಲಿ ಸಂತೃಪ್ತ ಭಾವ ಕಂಡ  ಗುರುಗಳದು ಅದೆಂಥ ನಿಸ್ವಾರ್ಥ, ಸಾರ್ಥಕ ಸೇವೆ ಎಂದೆನಿಸಿತ್ತದೆ..         ನಮ್ಮ ಕ್ಲಾಸ್ ಸರ್ ಎಂದರೆ ಎಲ್ಲ ಮಕ್ಕಳಿಗೆ  ಎಲ್ಲಿಲ್ಲದ ಭಯ. ಅವರ ಹೆಜ್ಜೆಯ ಸಪ್ಪಳಕ್ಕೆ ಕ್ಲಾಸಿಗೆ ಕ್ಲಾಸೇ ಬೆಚ್ಚಿ ಬೀಳುತ್ತಿತ್ತು.ಅವರು ಎಂದೂ ಯಾರಿಗೂ ತಮ್ಮ ಬೆತ್ತದ ರುಚಿ ತೋರಿಸಿರಲಿಲ್ಲ. ಅವರದೇನಿದ್ದರೂ ಕಣ್ಣಿನಲ್ಲಿಯೇ ಹೆದರಿಸುವ ಪರಿ. ಕ್ಲಾಸ್ ಮುಗಿದ ಮೇಲೂ ಕಾಸು ತೆಗೆದುಕೊಳ್ಳದೇ ತಮ್ಮ ಮನೆಯಲ್ಲಿ ಬದಾಮು ಹಾಲು ಕೊಟ್ಟು ಹೇಳಿ ಕೊಟ್ಟ ಪಾಠಗಳು ಇಂದಿಗೂ ಮನದಲ್ಲಿ ಅಚ್ಚೊತ್ತಿವೆ.        ಕೈಯಲ್ಲಿ ಮಾರುದ್ದದ ಕೋಲು ಹಿಡಿದೇ ಕ್ಲಾಸಿಗೆ ಬರುತ್ತಿದ್ದ ಇಂಗ್ಲೀಷ್ ಸರ್ ಭಾಷೆ ಕಲಿಸುವ ರೀತಿ ಬ್ರಿಟೀಷರನ್ನೂ ದಂಗು ಬಡಿಸುವಂತಿರುತ್ತಿತ್ತು. ಹಳೆಗನ್ನಡದ ಕವಿತೆ ರಾಮಾಯಣ ಮಹಾಭಾರತದ ಪ್ರಸಂಗಗಳನ್ನು ಕನ್ನಡ ಗುರುಗಳ ಬಾಯಲ್ಲಿ ಕೇಳುತ್ತಿದ್ದರೆ ಎಂಥವರಿಗೂ ರೊಮಾಂಚನವಾಗುತ್ತಿತ್ತು. ಬೋಧಿಸುವದು ಗಣಿತವಾದರೂ ಸ್ಪಧರ್ಾತ್ಮಕ ಪರೀಕ್ಷೆಗಳಿಗೆ ಮಕ್ಕಳನ್ನು ಹೇಗೆ ಸಿದ್ಧಗೊಳಿಸಬೇಕೆಂಬುದನ್ನು  ಗಣಿತ ಶಿಕ್ಷಕರ ಗರಡಿಯಲ್ಲಿಯೇ ತಿಳಿಯಬೇಕು.ವಿಜ್ಞಾನದ ಮೆಸ್ಟ್ರಂತೂ  ದಿನ ನಿತ್ಯ ಹೊಸ ಹೊಸ ಪ್ರಯೋಗಗಳನ್ನು ಮಾಡಿ ತೋರಿಸಿ  ಜ್ಞಾನದ ದಾಹ ಹೆಚ್ಚಿಸುತ್ತಿದ್ದರು. ರಾಷ್ಟ್ರೀಯ ಭಾವೈಕ್ಯತೆಯನ್ನು ಹಿಂದಿ ಭಾಷೆಯಿಂದ ಸಾಧಿಸಲು ಸಾಧ್ಯವಿದೆಯೆಂದು ತೋರಿಸಿಕೊಟ್ಟವರು ಹಿಂದಿ ಭಾಷಾ ಶಿಕ್ಷಕರು . ಮಕ್ಕಳು ಕೀಟಲೆ ಮಾಡಿದರೆ ಚೆನ್ನ ಎನ್ನುತ್ತ ದೇಶಭಕ್ತಿಯ ಮೊಳಕೆಯೊಡಿಸಿದವರು  ಇತಿಹಾಸ ಗುರುಗಳು. ಆಟ ಆಡಿಸಿ ಮೈ ಕೈ ಗಟ್ಟಿ ಮಾಡಿಸಿದ ದೈಹಿಕ ಶಿಕ್ಷಕರನ್ನು ಕೈಯಲ್ಲಿ ಕುಂಚ ಹಿಡಿಸಿ ಬಣ್ಣ ಬಳಿಸಿ, ಬದುಕಿನ ರಂಗು ಹೆಚ್ಚಿಸಿದ ಡ್ರಾಯಿಂಗ್ ಶಿಕ್ಷಕರನ್ನು ನೆನಸದೇ ಇರುವದಾದರೂ ಹೇಗೆ?          ಕ್ವಿಜ್ದಲ್ಲಿ ಭಾಗವಹಿಸುವದು ನನಗೆ ಇಷ್ಟದ ಸಂಗತಿ.ಯಾವುದೇ ಸಂಘಗಳು ಕ್ವಿಜ್ ಸ್ಪಧರ್ೆ ಏರ್ಪಡಿಸಿದಾಗಲೂ ರಸಪ್ರಶ್ನೆಯಲ್ಲಿ ಅತ್ಯಧಿಕ ಪ್ರಶಸ್ತಿ ಪಡೆದ ದಾಖಲೆ ಇದ್ದ ನನ್ನ ಹೆಸರನ್ನೇ ಗೆಳೆತಿಯರು ಸೂಚಿಸಿ ಇದನ್ನು ನೀನು ಗೆಲ್ಲಲೇಬೇಕೆಂದು ತಾಕೀತು ಮಾಡುತ್ತಿದ್ದರು. ಹುಡುಗರೆಲ್ಲ ಕೇಕೆ ಸೀಟಿ ಹಾಕಿ ಅನುಮತಿಸುತ್ತಿದ್ದರು.        ಅದು ಓಪನ್ ಕ್ವಿಜ್ ಕಾಂಪಿಟೇಶನ್ ಆಗಿದ್ದರಿಂದ ಯಾವುದೇ ವಯೋಮಾನದವರು, ವೃತ್ತಿಯಲ್ಲಿರುವವರು  ಭಾಗವಹಿಸಬಹುದಿತ್ತು ಬಹುಮಾನವಾಗಿಟ್ಟ ಸಂಚಾರಿ ಫಲಕವನ್ನು ಸತತ 3 ವರ್ಷ ಪ್ರಥಮ ಬಂದವರಿಗೆ ಶಾಶ್ವತವಾಗಿ ತಮ್ಮದಾಗಿಸಿಕೊಳ್ಳಬಹುದು ಎಂಬ ಷರತ್ತು ಹೊಂದಿತ್ತು. ಎರಡು ವರ್ಷ ಸಂಚಾರಿ ಫಲಕ ಪಡೆದು ಫೈನಲ್ ಘಟ್ಟ ತಲುಪಿದ್ದೆ. ಈ ವರ್ಷ ಏನಾಗುತ್ತೋ ಎನ್ನುವ ಭಯ ಕಾಡುತ್ತಿತ್ತು. ಪ್ರೇಕ್ಷಕರಾಗಿ ನಿಂತ ಸಹಪಾಠಿಗಳೆಲ್ಲ ನನ್ನ ಹೆಸರು ಕೂಗಿ ಉತ್ತೇಜಿಸುತ್ತಿದ್ದರು. ರಸ ಪ್ರಶ್ನೆ ಹುಚ್ಚು ಹಿಡಿಸಿದ್ದ ಮಾರ್ಗದರ್ಶಕರು ಪ್ಲೀಸ್ ಇದೊಂದನ್ನು ಗೆದ್ದು ಬಿಡು ಹೆದರ ಬೇಡ ಗೆಲ್ಲುವ ತಾಕತ್ತು ನಿನ್ನಲ್ಲಿದೆ. ಎಂದು ಧೈರ್ಯ ತುಂಬಿದ್ದರು.ಅದು ನಮ್ಮ ಕಾಲೇಜಿನ ಪ್ರತಿಷ್ಟೆಯ ವಿಷಯವಾಗಿತ್ತು.          ಸಿಕ್ಕ ಸಿಕ್ಕ ಪೇಪರ್ ಚೂರುಗಳನ್ನೆಲ್ಲ ಓದುವ ನನ್ನ ಚಟಕ್ಕೆ ಅಂದು ಅದೃಷ್ಟ ಖುಲಾಯಿಸಿತ್ತು. ಇಡೀ ಕಾಲೇಜು ನನ್ನ ಗೆಲುವಿನಿಂದ ಬೀಗಿತ್ತು. ಶೀಲ್ಡ್ಗೆ ನಾನು ಮುತ್ತಿಟ್ಟಾಗ ಮಾರ್ಗದರ್ಶಕರಾಗಿದ್ದ ಮೇಸ್ಟ್ರು ದೂರದಿಂದಲೇ ತಮ್ಮೆರಡು ಥಮ್ಸ್ ಅಪ್ ಮಾಡಿ ನನ್ನೆಡೆಗೆ ಹೆಮ್ಮೆಯಿಂದ ನೋಡಿದ ರೀತಿ ಇಂದಿಗೂ ಕಣ್ಮರೆಯಾಗಿಲ್ಲ.      .       ಇವೆಲ್ಲ ನಡೆದು ದಶಕಗಳೇ ಕಳೆದರೂ ಈಗ ತಾನೆ ಬಿಮ್ಮನೆ ಬಿರಿದ ಮಲ್ಲಿಗೆ ಹೂವಿನಂತೆ ಸುವಾಸನೆ ಬೀರಿ ನನ್ನನ್ನು ಕಾಡುತ್ತವೆ. ಒಂದೇ ಒಂದು ಬಾರಿ ಆ ಮಹಾನುಭವರನ್ನೆಲ್ಲ ಮತ್ತೆ ಕಾಣುವಂತಾದರೆ ಎಂದು ಮನಸ್ಸು ಹಂಬಲಿಸುತ್ತದೆ. ದೀಪದಂತೆ ತಾನುರಿದು ನಮಗೆ ಜ್ಞಾನದ ಬೆಳಕು ನೀಡುವ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ತಮ್ಮೊಂದಿಗೆ ಹಂಚಿಕೊಳ್ಳಬೇಕೆನಿಸಿತು.. ತಮಗೆ ಕಲಿಸಿದ ಶಿಕ್ಷಕರ ನೆನಪು ಇನ್ನೂ ಹಸಿರಾಗಿದೆಯಲ್ಲವೆ? ಹಾಗಿದ್ದರೆ ಅವರಿಗೊಂದು ವಿಶ್ ಮಾಡಿ.ದೊಡ್ಡವರಾದ ಮೇಲೆ ಅಥವಾ ಜೀವನದಲ್ಲಿ ಸೆಟ್ಲ್ ಆದ ಮೇಲೆ ಅವರನ್ನು ಕಂಡು ಕೃತಜ್ಞತೆ ಸಲ್ಲಿಸಲೇ ಇಲ್ಲವಲ್ಲಾ ಎಂಬ ಭಾವ ಕಾಡುತ್ತಿದ್ದರೆ  ಅವರನ್ನೊಮ್ಮೆ ಕಂಡು ಅವರ ಕಂಗಳಲ್ಲಿ ಹೊಳೆಯುವ ಖುಷಿ ನೋಡಿ ಆನಂದಿಸಿ. ಸಾಧ್ಯವಾಗದಿದ್ದರೆ ಅಪರೋಕ್ಷವಾಗಿ ನೂರಾರು ಬಾರಿ ಆ ಕಾಣುವ ದೇವರಿಗೆ ಕೃತಜ್ಞತೆ ಅಪರ್ಿಸಿ.     ನಮ್ಮ ತಪ್ಪುಗಳನ್ನು ತಿದ್ದಿ ತೀಡಿ, ಮೆಚ್ಚುಗೆಯ ಮಾತುಗಳನ್ನಾಡಿ, ಬೆನ್ನು ತಟ್ಟಿ, ಪ್ರೀತಿ ಕಾಳಜಿ ಹರಿಸಿ, ಅಕ್ಷರ ಕಲಿಸಿ ಅರಿವು ಮೂಡಿಸಿದ ಗುರುಗಳ ಬಗ್ಗೆ  ಹೇಳುತ್ತ ಸಾಗಿದರೆ, ಮನದಲ್ಲಿ ಹೆಮ್ಮೆಯ ಭಾವ ಮೂಡುತ್ತೆ. ಇಂಥವರ ಕೈಯಲ್ಲಿ ಕಲಿತು ಬಾಳು ಬೆಳಗಿಸಿಕೊಂಡಿದ್ದೇವೆಲ್ಲ ಎಂದು  ಖುಷಿ ನೂರ್ಮಡಿಯಾಗುತ್ತೆ. ಇವರ ಋಣವ ತೀರಿಸುವದೆಂತು? ಎಂಬ ಪ್ರಶ್ನೆಯೂ ದೊಡ್ಡದಾಗಿ ಕಾಡುತ್ತೆ. ಬಾಳು ಬೆಳಗಿಸುವ ಗುರುಗಳು ಹೇಳಿಕೊಟ್ಟ ಸಲಹೆ ಸೂಚನೆ ಜೀವನ ಮೌಲ್ಯಗಳನ್ನು ನಾವು  ಚಾಚೂ ತಪ್ಪದೇ ಪಾಲಿಸುತ್ತ ಇತರರಿಗೂ ಆ ಬೆಳಕಿನಲ್ಲಿ ನಡೆಯಲು ನೆರವಾಗುತ್ತಾ ಸಾಗಿದರೆ ಅವರ ಋಣವನ್ನು ಸ್ವಲ್ಪ ಮಟ್ಟಿಗಾದರೂ ತೀರಿಸಬಹುದೇನೋ? ಬನ್ನಿ ನಮಗೆಲ್ಲ ಅರಿವು ನೀಡಿದ ಗುರುಗಳಿಗೆ ನೂರೆಂಟು ನಮನ ಸಲ್ಲಿಸಿ ಇಂದಿನಿಂದಲೇ ತೀರಿಸಲಾಗದ ಗುರುವಿನ ಋಣವನು ತೀರಿಸಲು ಯತ್ನಿಸೋಣ. ************

ಗುರುವಿನ ಋಣ Read Post »

ಇತರೆ

ಓ ನಮ್ಮ ಶಿಕ್ಷಕ ನೀ ನಮ್ಮ ರಕ್ಷಕ

ಓ ನಮ್ಮ ಶಿಕ್ಷಕ ನೀ ನಮ್ಮ ರಕ್ಷಕ ವಿಭಾ ಪುರೋಹಿತ್ ಓ ನಮ್ಮ ಶಿಕ್ಷಕನೀ ನಮ್ಮ ರಕ್ಷಕ ಮರೆಯಲೆಂತು ನಿನ್ನ ಸೇವೆಕರೆವ ಜ್ಞಾನ ಹಾಲ ಗೋವೆನಿನಗೆ ನಮ್ಮ ನಮನವುನಿನ್ನ ಅಡಿಗೆ ಸುಮನವು————ಧಾರವಾಡದ ಜಿ. ಎಸ್. ಕುಲಕರ್ಣಿ ಧಾರವಾಡದ ಜಿ.ಎಸ್ . ಕುಲಕರ್ಣಿ ಅವರ ಸಾಲುಗಳು ಇಲ್ಲಿ ನೆನೆಯಬಹುದು ಮನಃಪಟಲಕ್ಕೆ ಬಂದು ಅಚ್ಚೊತ್ತಿದ ಕೆಲವು ಘಟನೆಗಳನ್ನು ಬರೆಯದೇ ಇರಲಾಗುವುದಿಲ್ಲ.ಎಲ್ಲಿಂದಲೋ ಬಂದ ದಿವ್ಯ ಚೇತನ ಬೆನ್ನುತಟ್ಟಿ ಬರೆಯಲಾರಂಭಿಸಿತು.ಮೂವತ್ತು ವ ರ್ಷಗಳ ಹಿಂದೆ ಓಡಾಡಿದ ಜಾಗ,ಆಟವಾಡಿದ ಸ್ಥಳ,ಮಣ್ಣಿ ಗೆ,ಕಲ್ಲಿಗೆ ಅಕ್ಕರೆಯಿಂದ ಮುತ್ತಿಟ್ಟು ಆಡುತ್ತಿದ್ದ ಕುಂಟಾಟ ಒಂದಾದ ಮೇಲೊಂದು ನೆನಪಿನ ಪರದೆಯ ಮೇಲೆ ಮೂಡಿ ಬಂದವು.ನಾವು ಕಲಿತ ಶಾಲೆ,ಶಾಲಾಪ್ರಾಂಗಣ,ಆಟದ ಮೈದಾನಗಳೆಲ್ಲವು ನಮ್ಮನ್ನು ಕೈಬೀಸಿ ಕರೆಯುತ್ತಿದ್ದಂತೆ ಭಾಸ.ಅದೇ ಧ್ವಜಸ್ತಂಭ,ಹಿಂದೆ ರಾಷ್ಟ್ರೀಯ ಹಬ್ಬಗಳಂದು ಎದೆ ಉಬ್ಬಿಸಿ ನಿಂತು ಅತ್ತಿತ್ತ ಅಲ್ಲಾಡದೆ ‘ ಜನಗಣ ಮನ ‘ ಹಾಡಿ ಸೆಲ್ಯುಟ್ ಮಾಡಿದ್ದು .ಗೆಳೆಯ ಗೆಳತಿಯರೊಡನೆ ತುಂಟಾಟವಾಡಿದ ದಿನಗಳು ಕಣ್ಮುಂದೆ ತೇಲಿ ಹೋದವು. ಜ್ಞಾನಕ್ಕೆ ಹ್ಯಾಗೆ ಜಾತಿ ಮತ ಭಾಷೆಗಳ ತಾರತಮ್ಯವಿಲ್ಲ ವೋ,ಅದೇ ರೀತಿ ಬಾಲ್ಯ.ಬಾಲ್ಯ ಜೀವನಾವಸ್ಥೆಯ ಒಂದು ಅದ್ಭುತವಾದ ಘಟ್ಟ.ಎಲ್ಲರೊಡನೆ ಬೆರೆತು ಬಾಳಿದ,ಆಡಿ ದ ಸವಿ ಸವಿ ನೆನಪಿದೆ.ಈರ್ಷೆ,ಮತ್ಸರ ಎಂಬ ಪದಗಳೇ ಗೊತ್ತಿಲ್ಲದ ನಿರ‍್ಮಲ ಮನೋಭಾವ. ಮುಗ್ಧಮನ ಶುದ್ಧ ಮ ನ. ಅಂದಿನ ಪರಿಸರ ಎಷ್ಟೊಂದು ಸಕಾರಾತ್ಮಕ !ಸುತ್ತ ಮುತ್ತಲು ಧಾರ್ಮಿಕವಾಗಿ,ಸಾಂಸ್ಕೃತಿಕವಾಗಿ ಹಾಗೂ ಶೈಕ್ಷಣಿ ಕವಾಗಿ ಬೆಳವಣಿಗೆಯಾಗಲು ಸಂಪೂರ್ಣ ಹೇಳಿ ಮಾಡಿಸಿ ದಂತಹ ವಾತಾವರಣ. ಸರ್ವಸದ್ಗುಣಗಳನ್ನು ಹೊಂದಿದಂಥ ನನ್ನ ಬಾಲ್ಯ ಭೂಮಿ ಕೃಷ್ಣಾಪುರ,ಜಿ|| ಯಾದಗಿರಿ. ಮುಂದೊಂದುದಿನ ಅಲ್ಲಿಗೆ ಭೇಟಿ ಕೊಡುತ್ತೇನೆಂದು ನಾನು ಅಂದುಕೊಂಡಿರಲೇ ಇಲ್ಲ. ಫೆಬ್ರವರಿ ೧೫,೨೦೧೯ ಆ ಪುನರ್ಮಿಲನದ ಸುಸಂಧಿ.ಇಂಥಹ ಸದಾವಕಾಶವನ್ನು ಕಲ್ಪಿಸಿಕೊಟ್ಟ ಹಳೆಯ ವಿದ್ಯಾರ್ಥಿ ಸಂಘದ ರೂವಾರಿಗಳಿಗೆ ಮನದಲ್ಲಿ ಕೃತಜ್ಞತಾ ಭಾವವಿತ್ತು. ಬೆಂಗಳೂರಿನಿಂದ ಆ ಪುಣ್ಯ ಭೂಮಿಗೆ ಕಾಲಿಟ್ಟ ಕೂಡಲೇ ತಿರುಪತಿಗಿರಿವಾಸ ಶ್ರೀವೆಂಕ ಟೇಶನಂತೆ ಮೊದಲು ದರುಶನ ನೀಡಿದ್ದು ನಮ್ಮ ಸಮಾಜ ಪಾಠದ ಗುರುಗಳಾದ ರಾಮರೆಡ್ಡಿಯವರು.ಮನದಲ್ಲಿ ಉ ಲ್ಲಾಸ,ರೋಮಾಂಚನದೊಂದಿಗೆ ಪುಳಕಿತಗೊಂಡು ಅವರ ಪಾದಗಳಿಗೆ ನಮಸ್ಕರಿಸಿದೆ. ಹಳೆಯ ವಿದ್ಯಾರ್ಥಿ ಸಂಘದಿಂದ ಹಮ್ಮಿಕೊಂಡಿದ್ದ ಕಾರ‍್ಯ ಕ್ರಮದ ರೂಪುರೇಷೆಯಂತೆ ಪ್ರಥಮವಾಗಿ ಗುರುವೃಂದ ವನ್ನು ಬಿಜಾಸ್ಪೂರ ಶಾಲೆಯಿಂದ ಕೃಷ್ಣಾಪುರ ಕ್ಯಾಂಪ್ ಶಾಲೆಗೆ ಮೆರವಣಿಗೆಯಲ್ಲಿ ಕರೆತರಲಾಯಿತು.ನೂರಾರು ವಿ ದ್ಯಾರ್ಥಿಗಳು,ಊರಿನಜನರು ಹಾಗೂ ಗುರುಗಳು,ಕಡು ಬಿಸಿಲಿನ ಶಾಖವನ್ನು ಮರೆತು ಗುರುವಂದನೆಯ ಧನ್ಯತೆ ಯ ತಂಪನ್ನು ಸವಿಯುತ್ತ ಹೆಜ್ಜೆಹಾಕಿದರು.ಇದರೊಂದಿಗೆ ಗ್ರಾಮೀಣ ಸೊಗಡಿನ ಡೊಳ್ಳು ಕುಣಿತವು ಸರ್ವರಕಣ್ಮನ ತಣಿಸಿತು. ವಿಶಾಲವಾದ ಶಾಲಾ ಪ್ರಾಂಗಣ ಗುರುವಂದನಾ ಕಾರ‍್ಯಕ್ರ ಮದ ಮೆರವಣಿಗೆಗೆ ಹಾತೊರೆಯುತ್ತಿದ್ದಂತೆ ಕಂಡಿತು. ಪ್ರತಿ ಯೊಬ್ಬರಿಗೂ ಮಂದಹಾಸ ಬೀರಿ ಮಡಿಲಲ್ಲಿ ಕೂರಿಸಿಕೊಂ ಡಿತು ನಮ್ಮ ತರಗತಿಗೆ ಕಲಿಸಿದ ಗುರುಗಳು ಕೇವಲ ನಾಲ್ಕು ಜನ ಮಾತ್ರ ಹಾಜರಿದ್ದರು.ಉಳಿದವರು ನಮ್ಮನ್ನಗಲಿದ್ದಾ ರೆಂದು ತಿಳಿದು ತುಂಬ ನೋವಾಯಿತು.ಇನ್ನೊಮ್ಮೆ ಅವರ ದರ್ಶನ ಸಾಧ್ಯವಾಗಲಿಲ್ಲವೆಂದು ಮನ ಕೊರಗಿತು.ಗುರು ವೃಂದಕ್ಕೆ ಸನ್ಮಾನಿಸಲಾಯಿತು.ನಂತರ ಗುರುಗಳೆಲ್ಲರು ತಾವು ಅನು ಭವಿಸಿದ ಬದುಕಿನ ಸತ್ವಯುತ ನುಡಿಗಳನ್ನಾಡಿ ಸಭೆಯನ್ನು ಮೂಕ ವಿಸ್ಮಿತಗೊಳಿಸಿದರು. ಅಪಾರ ಜೀವನಾನುಭವ ವುಂಡವ ಅವರ ಕಣ್ಣುಗಳು ಒದ್ದೆಯಾದವು. ಹನಿ ಹನಿ ನೆನ ಪಿನ ಬುತ್ತಿಯನ್ನು ಸವಿಸವಿಯಾಗಿ ಹೃದಯ ತುಂಬಿ ಹಂಚಿಕೊಂಡರು. ಈ ವೇದಿಕೆಯಲ್ಲಿ ಮತ್ತೊಂದು ಅಪರೂಪದ ಕ್ಷಣ ನಮಗೆಲ್ಲ ಕಾದಿತ್ತು.ನಮ್ಮ ಹಿರಿಯ ಗುರುಗಳಾದ ಶ್ರೀ ರಾಮರೆಡ್ಡಿಯ ವರ ಪುಸ್ತಕದ ಬಿಡುಗಡೆ ಸಮಾರಂಭ. ಪುಸ್ತಕದ ಹೆಸರು“ ಚೌಚೌಇಂಗ್ಲೀಷ “.ಇದರಲ್ಲಿ ನಾನು ಗ್ರಹಿಸಿದಂತೆ ಮೂರು ವಿಶೇಷತೆಗಳಿವೆ.ಮೊದಲನೆಯದಾಗಿ ಪುಸ್ತಕದ ಮುನ್ನುಡಿ ಶಿಷ್ಯನಿಂದ ಬರೆಯಲ್ಪಟ್ಟಿರುವುದು.ಎರಡನೇಯದಾಗಿ ಪುಸ್ತಕವು ಲೋಕಾರ್ಪಣೆಗೊಂಡಿದ್ದು ಅವರ ವಿದ್ಯಾರ್ಥಿಗಳ ಹಸ್ತದಿಂದಲೇ,ಹಾಗೂ ಮೂರನೇಯದು ಆಂಗ್ಲಭಾಷೆ ಯನ್ನು ‘ ಕಬ್ಬಿಣದಕಡಲೆ ‘ ಎಂದು ಭಾವಿಸುವ ಸರಕಾರಿ ಕನ್ನಡ ಶಾಲೆಯ ಮಕ್ಕಳಿಗೆ ನೀರುಕುಡಿದಷ್ಟೇ ಸುಲಭವಾಗಿ ತಿಳಿಯುವಂತಿರುವ ವಿವರಣಾ ಶೈಲಿ. ಇಳಿವಯಸ್ಸಿನಲ್ಲೂ ರಾಮರೆಡ್ಡಿ ಗುರುಗಳ ಉತ್ಸಾಹ ಮೆಚ್ಚುವಂಥದ್ದು.ಇಂಥ ಗುರುಗಳಿಗೆ ಶಿಷ್ಯರಾದ ನಾವೇ ಧನ್ಯರು. ಭಾವಸಾಗರದಲ್ಲಿ ತೇಲಿ ಹೋದ ನಮ್ಮನ್ನು ಹೊಟ್ಟೆಯು ತಾಳ ಹಾಕಿ ಬಡಿದೆಬ್ಬಿಸಿತು.ಹಸಿವನ್ನು ತಣಿಸಲು ‘ಜಲೀಲ ಮತ್ತು ತಂಡದವರು’ ಸಜ್ಜಾಗಿನಿಂತಿದ್ದರು.ಶಾಲೆಯ ಪವಿತ್ರ ಮಂದಿರದಲ್ಲಿಯಾವತಾರತಮ್ಯವಿಲ್ಲದೇ ಸಾಲಾಗಿ ಕುಳಿತು ಒಟ್ಟಾಗಿಊಟಮಾಡಿದೆವು.ತಾಯಿಯ ಮಡಿಲಲ್ಲಿ ಕೂತು ಉಂಡಂತೆ ಅನುಭವವಾಯಿತು.ಇದು ಬರಿ ಶಾಲೆಯಲ್ಲ ಮಾತೃಶಾಲೆಯೆಂದೆನಿಸಿತು.ಬಾಲ್ಯದ ಶಾಲಾದಿನಗಳನ್ನು ಮೆಲುಕು ಹಾಕಿಸುವ ಇಂಥ ಗುರುವಂದನಾ‌ ಕಾರ‍್ಯಕ್ರಮ ‘ನ ಭೂತೋ ನ ಭವಿಷ್ಯತಿ’ ಅಂದರೆ ಅತಿಶಯೋಕ್ತಿಯಾಗ ಲಾರದು. ಕನ್ನಡಮಾದ್ಯಮ ಸರಕಾರಿ ಶಾಲೆ ಎಂದು ಕಡೆಗೆಣಿಸುವವರಿಗೆ ಕೃಷ್ಣಾಪುರ (ಬಿಜಾಸ್ಪೂರ) ಶಾಲೆ ಆದರ್ಶಪ್ರಾಯವಾ ಗಿದೆ.ಈ ಶಾಲೆಯಿಂದಕಲಿತ ವಿದ್ಯಾರ್ಥಿಗಳು ಪ್ರತಿಯೊಂದು ರಂಗದಲ್ಲಿ ಉನ್ನತಿ ಪಡೆದ್ದಿದ್ದಾರೆ.ಅಭಿಯಂತರರು,ವೈದ್ಯ ರು,ಉಪನ್ಯಾಸಕರು,ಶಿಕ್ಷಕರು,ಪತ್ರಕರ್ತರು,ಸಾಹಿತಿಗಳು,ಆರಕ್ಷಕರು,ಸಮಾಜಸೇವಕರು,ಸೈನಿಕರು ಇತ್ಯಾದಿ ಹೀಗೆ ದೇಶ ಕಾಯುವ ಮತ್ತು ದೇಶ ಕಟ್ಟುವ ಕ್ಷೇತ್ರದಲ್ಲಿ ಸೇವೆ ಸ ಲ್ಲಿಸುತ್ತಿದ್ದಾರೆ.ಎಲ್ಲಕ್ಕಿಂತ ಮಿಗಿಲಾಗಿ ತಮ್ಮ ಬದುಕನ್ನು ತಾ ವೇ ಸಮರ್ಥವಾಗಿ ಸಾಗಿಸಲು ದೃಢವಾದ ನೆಲೆಯನ್ನು ಕಂ ಡುಕೊಂಡಿದ್ದಾರೆ.ಇಂಥ ಸರಕಾರಿ ಶಾಲೆಗಳೇ ಸಮಾಜದ ಇಂದಿನ ಅವಶ್ಯಕತೆಯೂ ಸಹ. . **************************************************

ಓ ನಮ್ಮ ಶಿಕ್ಷಕ ನೀ ನಮ್ಮ ರಕ್ಷಕ Read Post »

ಅಂಕಣ ಸಂಗಾತಿ, ಮೂರನೇ ಆಯಾಮ

ಅಂಕಪಟ್ಟಿ ಬಾಲ್ಯ ಪುಸ್ತಕ-ಅಂಕಪಟ್ಟಿ ಬಾಲ್ಯಕವಿ- ರವಿರಾಜ ಸಾಗರಪ್ರಕಾಶನ- ಮಾತೋಶ್ರೀ ಈರಮ್ಮ ವಡ್ಡನಕೇರಿ ಪ್ರತಿಷ್ಟಾನ, ಕಮಲಾಪುರಬೆಲೆ-೧೩೦/- ಸ್ಪರ್ಧಾಲೋಕದಿ ಬೇಕೇ ಬೇಕಂತೆತರತರ ಪ್ರಮಾಣ ಪತ್ರಗಳುಕಷ್ಟವಾದರೂ ಮಾಡಲೇ ಬೇಕಂತೆನಾವು ಬಯಸದ ಪಾತ್ರಗಳು    ಇದು ಇಂದಿನ ದಿನಮಾನದ ಎಲ್ಲಾ ಮಕ್ಕಳ ಸಮಸ್ಯೆ. ಮಕ್ಕಳ ಮನಸ್ಸನ್ನು ಯಾರು ಅರ್ಥ ಮಾಡಿಕೊಳ್ಳುತ್ತಾರೆ ಹೇಳಿ? ನಮಗೆ ಹೆಚ್ಚು ಅಂಕಕೊಡುವ ರೋಬೋಟ್ ಬೇಕಿದೆಯೇ ಹೊರತು, ನಮ್ಮಿಂದ ಮುದ್ದಿಸಲ್ಪಟ್ಟು, ನಮ್ಮನ್ನೂ ಪ್ರೀತಿಸುವ ಮಗು ಬೇಕಾಗಿಲ್ಲ. ಎಲ್ಲ ಅಪ್ಪ ಅಮ್ಮಂದಿರಿಂದ ಹಿಡಿದು, ಶಿಕ್ಷಣ ಇಲಾಖೆಯಿಂದ ಹಿಡಿದು ಸಮಾಜದ ಎಲ್ಲರಿಗೂ ಮಗುವಿನ ಅಂಕವೇ ಆ ಮಗುವನ್ನು ಅಳೆಯುವ ಮಾನದಂಡವಾಗಿದೆಯೇ ಹೊರತೂ ಮಗುವಿನ ಮನಃಸ್ಥಿತಿ ಹೇಗಿದೆ? ಅದಕ್ಕೆ ಏನು ಪ್ರೀಯ? ಅದರ ಇಷ್ಟ ಕಷ್ಟಗಳೇನು ಎಂದು ತಿಳಿಯುವ ಒಂದಿಷ್ಟು ಪ್ರಯತ್ನವನ್ನಾದರೂ ನಾವು ಮಾಡಿದ್ದೇವೆಯೇ? ಖಂಡಿತಾ ಇಲ್ಲ. ಇಂದಿನ ಮಕ್ಕಳ ಬಾಲ್ಯ ಅಂಕಪಟ್ಟಿಯ ಮಾರ್ಕುಗಳಲ್ಲಿ ಕಳೆದು ಹೋಗಿದೆ. ಚಿಕ್ಕವನಿನ್ನೂ ಆಟವ ಆಡುಎಂದು ಯಾರೂ ಹೇಳರುಶಾಲೆಗೆ ಫಷ್ಟು ಬರಲೇಬೇಕುಎನ್ನುತ ಒತ್ತಡ ಹೇರುವರು     ಕಾಡು ಬೆಟ್ಟ ಅಲೆದು, ಕಾಡಿನಲ್ಲಿ ಆಯಾ ಸಿಜನ್ನಿನಲ್ಲಿ ಆಗುವ ಹಣ್ಣನ್ನು ಕೊಯ್ದುಕೊಂಡು ತಿನ್ನುವ ನಮ್ಮ ಬಾಲ್ಯ ಈ ಮಕ್ಕಳಿಗೆ ದೊರಕೀತೇ? ಕಾಡಿನ ಹಣ್ಣುಗಳನ್ನೇ ನೋಡಿರದ ಅವು ಏನಾದರೂ ಹಣ್ಣಿಗೆ ಕೈ ಹಚ್ಚಿದರೆ ಸಾಕು, ಹೈಜಿನ್ನಿನ ಪಾಠ ಹೇಳುವ ಮಮ್ಮಿ ಡ್ಯಾಡಿಗಳು ಹೌಹಾರಿ ಬಿಟ್ಟಾರು. ಆದರೆ ನಮ್ಮ ಅಪ್ಪ ಅಮ್ಮಂದಿರಿಗೆ ಮಕ್ಕಳು ಕಾಡಿನ ಯಾವ ಹಣ್ಣು ತಿಂದರೂ ಯಾವ ಅಭ್ಯಂತರವೂ ಇರಲಿಲ್ಲ. ನಾನು ಹಯಸ್ಕೂಲಿಗೆ ಹೋಗುವವರೆಗೂ ನನ್ನ ಶಾಲೆಯ ಬ್ಯಾಗ್ ತುಂಬಾ ಮಳೆಗಾಲದಲ್ಲಿ ಬಿಕ್ಕೆ ಹಣ್ಣು, ಅದರ ಒಡೆದ ಸಿಪ್ಪೆಗಳಿಮದಲೇ ತುಂಬಿರುತ್ತಿತ್ತು. ಅದೇ ಶಾಲೆಯ ಶಿಕ್ಷಕಿಯಾದ ಅಮ್ಮ ಏನಾದರೂ ನನ್ನ ಬ್ಯಾಗ್ ತೆರೆದರೆ ಈ ಟೀಚರ್ರು ಮಗಳಿಗೆ ಹೊಟ್ಟೆಗೇ ಹಾಕೂದಿಲ್ಲ ಅನ್ನೂರು, ಅದೇನ್ ಆ ಚೊಗರು ಕಾಯಿ, ಗಟ್ಟಿ ಹಣ್ಣು ತಿಂತೀಯೇ? ಎಂದು ಬೈಯ್ಯುತ್ತ ಇಡೀ ಚೀಲ ಸ್ವಚ್ಛ ಮಾಡುತ್ತಿದ್ದರು. ಪಿಳ್ಳೆ ಹಣ್ಣು ತಿಂದು ನೀಲಿಗಟ್ಟಿದ ನಾಲಿಗೆಯನ್ನು ಸ್ವಚ್ಛ ಮಾಡಿಕೊಳ್ಳಲು ಪಿಳ್ಳೆ ಹಣ್ಣು ಸುಲಭವಾಗಿ ಸಿಗುತ್ತಿತ್ತು. ಮಳೆಗಾಲ ಮುಗಿದ ತಕ್ಷಣ ಚಳಿಗಾಲದಲ್ಲಿ ಸಂಪಿಗೆ ಹಣ್ಣು, ಮಜ್ಜಿಗೆ ಹಣ್ಣು, ಕೊನೆಗೆ ರಂಜಲು ಹಣ್ಣು ಹೀಗೆ ಎಲ್ಲ ಹಣ್ಣುಗಳು ಆಯಾ ಕಾಲಕ್ಕೆ ತಕ್ಕಂತೆ ನಮ್ಮ ಬ್ಯಾಗ್‌ನಲ್ಲಿ ಜಾಗ ಪಡೆದಿರುತ್ತಿದ್ದವು. ಪರೀಕ್ಷೆ ಮುಗಿಯುತ್ತಿದ್ದಂತೆ ಮಾವಿನ ಮಿಡಿಗಳು ನಮ್ಮಿಂದ ಉಪ್ಪು ಖಾರಾ ಹಾಕಿ ನಾಲಿಗೆಗೆ ಚುರುಕು ಮುಟ್ಟಿಸಲು ಕಾಯುತ್ತಿದ್ದವು. ಹಸಿ ಗೇರು ಬೀಜ ಸುಲಿದು ಕೈಯ್ಯ ಚರ್ಮವೆಲ್ಲ ಸುಲಿದು ಹೋಗುವುದು ಮಾಮೂಲಾಗಿತ್ತು. ಹಾಗೆ ಹಣ್ಣು ಕೊಯ್ಯಲು ಮರ ಹತ್ತಿ, ಕೆಳಗಿರುವ ಗಾಜಿನ ಚೂರಿನ ಮೇಲೆ ಬಿದ್ದು ಆದ ಗಾಯ ಇಂದಿಗೂ ನನ್ನ ಕಾಲಿನ ಮೇಲೆ ಸವಿನೆನಪನ್ನು ಉಳಿಸಿಕೊಂಡಿದೆ. ಆದರೆ ನಮ್ಮ ಮಕ್ಕಳನ್ನು ಹಾಗೆ ಕಾಡು ಸುತ್ತಲು ಬಿಟ್ಟೇವೆಯೇ? ಅವರ ಕಾಲಿಗೊಂದು ಸೊಳ್ಳೆ ಕಚ್ಚಿದರೂ ಜಗತ್ತೇ ತಲೆಕೆಳಗಾದಂತೆ ವರ್ತಿಸುವ ನಮಗೆ ಮಕ್ಕಳ ಬಾಲ್ಯವನ್ನು ಜೈಲಿನಲ್ಲಿಡುತ್ತಿರುವ ಅರಿವೂ ಆಗದಿರುವುದು ವಿಷಾದನೀಯ. ಆದರೆ ರವಿರಾಜ್ ಸಾಗರ ಮಕ್ಕಳ ಮಾತಿಗೆ ಜೀವ ತುಂಬಿದ್ದಾರೆ.  ಹೀಗಾಗಿಯೇ ಈ ಸಂಕಲನದಲ್ಲಿಯಾರು ಕೇಳೋರು ನಮ್ಮ ತಲೆಬಿಸಿಯಾಲೈಪಲ್ಲಿ ಗೆಲ್ಲೋಕೆ ರ್‍ಯಾಂಕೇ ಯಾಕ್ರಯ್ಯಾ?ಎಂದು ಮಕ್ಕಳು ಕೇಳುತ್ತಿದ್ದಾರೆ. ಹೇಳಿ, ಬದುಕನ್ನು ಗೆಲ್ಲಲು ರ್‍ಯಾಂಕ ಒಂದೇ ಆಧಾರವೇ? ವಿಚಿತ್ರ ಎಂದರೆ ಇತ್ತೀಚಿನ ದಿನಗಳಲ್ಲಿ ನಮ್ಮಲ್ಲಿ ಐಎಎಸ್, ಕೆಎಎಸ್ ಪಾಸು ಮಾಡಿದ ಹಲವರು ಚಿಕ್ಕಂದಿನಲ್ಲಿ ರ್‍ಯಾಂಕ್ ಬಂದವರಲ್ಲ. ನಂತರ ಓದಿನ ಮಹತ್ವವನ್ನು ಅರಿತು ತಮ್ಮ ಮಾರ್ಗವನ್ನು ತಾವೇ ನಿರ್ಮಿಸಿಕೊಂಡವರು ಎಂಬುದನ್ನು ಗಮನಿಸಬೇಕಿದೆ.ನಮ್ಮ  ಶಾಲೆಯ ಪುಸ್ತಕದಲ್ಲಿಮಕ್ಕಳ ಹಕ್ಕು ಪಾಠವಿದೆಆ ಪಾಠದ ಪ್ರಶ್ನೆಗೆ ಉತ್ತರಿಸದೆ ಇದ್ದರೆಹೊಡೆಯಲು ಕೋಲು ಕಾಯುತಿದೆಮಕ್ಕಳ ಹಕ್ಕುಗಳು ಕೇವಲ ಓದಿ ಅಂಕಗಳಿಸಲಷ್ಟೇ ಇರುವ ಪಾಠಗಳೇ ಹೊರತೂ ಅದರಿಂದೇನೂ ಆಗುವುದಿಲ್ಲ ಎಂಬುದನ್ನು ಈ ಸಾಲುಗಳು ಚಂದವಾಗಿ ನಿರೂಪಿಸುತ್ತವೆ. ಮೊದಲೆಲ್ಲ ಮಕ್ಕಳಿಗಾಗಿ ಗ್ರಾಮ ಸಭೆ ನಡೆಸುತ್ತಿದ್ದೆವು. ಆಗಲೆಲ್ಲ ಮಕ್ಕಳು ಗಲಾಟೆ ಮಾಡದೇ ಮಾತೆ ಆಡದಂತೆ ಕುಳಿತಿರಬೇಕೆಂದು ಶಾಲೆಯಿಂದ ಗ್ರಾಮ ಪಂಚಾಯತ್‌ಗೆ ಹೊರಡುವ ಮೊದಲೇ ಮಕ್ಕಳಿಗೆ ಎಚ್ಚರಿಕೆ ನೀಡಿ ಕರೆದುಕೊಂಡು ಹೋಗುತ್ತಿದ್ದೆವು. ಎಂಟನೇ ತರಗತಿಯ ಮೊದಲ ಪಾಠವೇ ಎ ಡೇ ಇನ್ ಆಶ್ರಮ’ ರವೀಂದ್ರನಾಥ ಟಾಗೋರರ ಶಾಂತಿನಿಕೇತನದ ಕುರಿತಾಗಿ ಇರುವ ಪಾಠ. ಫಾರ್ಮಲ್ ಹಾಗೂ ಇನ್‌ಫಾರ್ಮಲ್ ಶಿಕ್ಷಣದ ಬಗ್ಗೆ ಚರ್ಚಿಸಿ ಮಕ್ಕಳೆಲ್ಲ ಇನ್‌ಫಾರ್ಮಲ್ ಶಿಕ್ಷಣವೇ ಹೆಚ್ಚು ಅನುಕೂಲ ಎಂದು ತಮ್ಮ ಅಭಿಪ್ರಾಯ ದಾಖಲಿಸಿದ ನಂತರ ‘ಎಲ್ಲರೂ ನಾಳೆ ಕಂಪಲ್ಸರಿ ಪ್ರಶ್ನೋತ್ತರ ಬರೆದು ತನ್ನಿ’ ಎಂದು ದೊಡ್ಡ ಕಣ್ಣು ಬಿಟ್ಟು ಹೇಳಿ, ‘ಗೊತ್ತಲ್ಲ, ನಾಳೆ ನಿಮ್ಮ ಪ್ರಶ್ನೋತ್ತರ ಪಟ್ಟಿ ಕಂಪ್ಲೀಟ್ ಆಗಲಿಲ್ಲ ಎಂದರೆ….’ ಎನ್ನುತ್ತ ಕೈಯ್ಯಲ್ಲಿರುವ ಕೋಲನ್ನು ಅರ್ಥಗರ್ಭಿತವಾಗಿ ನೋಡುತ್ತ ಪಾಠ ಮುಗಿಸುತ್ತೇವೆ. ಅಲ್ಲಿಗೆ ಆ ಪಾಠದ ಉದ್ದೇಶ ಸಫಲವಾದಂತೆ. ಹಾಗಾದರೆ ಪಾಠದ ಪ್ರಶ್ನೋತ್ತರಗಳನ್ನು ನೀಟಾಗಿ ಬರೆದು ಮುಗಿಸಿ ಹೆಚ್ಚು ಅಂಕ ಗಳಿಸೋದು ಮಾತ್ರವೇ ನದುಕಿನ ಸಾರ್ಥಕ್ಯವೇ?ಪರೀಕ್ಷೆಲಿ ಸೋತರೂ ಬದುಕಲ್ಲಿ ಗೆದ್ದೋರುಂಟುಗೆಲ್ಲಬೇಕೆನ್ನುವ ಕನಸು ಎಲ್ಲರಂತೆ ನಮಗುಂಟುನಿಜ. ಮಕ್ಕಳಲ್ಲಿ ತಾವೂ ಗೆಲ್ಲಬೇಕು ಎನ್ನುವ ಹಠ ಇರುತ್ತದೆ. ಕೆಲವರು ಅದಕ್ಕಾಗಿ ಹೆಚ್ಚು ಶ್ರಮ ಹಾಕುತ್ತಾರೆ. ಕೆಲವರು ಶ್ರಮ ಹಾಕದಿದ್ದರೂ ಅವರ ಬುದ್ಧಿಮತ್ತೆಗೆ ಅನುಸಾರವಾಗಿ ಗೆಲ್ಲುತ್ತಾರೆ. ಓದಿದವರು ಮಾತ್ರ ಗೆಲ್ಲುತ್ತಾರೆ ಎನ್ನುವುದು  ಎನ್ನುವುದು ನಿಜವಲ್ಲ. ಓದಿ ಓದಿ ಹೆಚ್ಚು ಅಂಕ ಗಳಿಸಿಯೂ ಜೀವನದಲ್ಲಿ ಗೆಲ್ಲಲಾಗದ ಅನೇಕರನ್ನು ನಾವು ಈಗಾಗಲೇ ಕಂಡಿದ್ದೇವೆ. ಹೆಚ್ಚು ಅಂಕ ಗಳಿಸು ಎಂದು ನಮ್ಮ ಮುಂದಿನ ತಲೆಮಾರನ್ನು ಪೀಡಿಸುವ ನಾವು ನಮ್ಮ ಮುಂದಿನ ಜನಾಂಗಕ್ಕಾಗಿ ಏನು ಬಿಟ್ಟಿದ್ದೇವೆ?ಧರೆಯನ್ನೆಲ್ಲ ಅಗೆದು ಬಗೆದುಸಂಪತ್ತನ್ನೆಲ್ಲ ತಿಂದು ತೇಗಿನಮ್ಮಯ ನಾಳೆಗೆ ಉಳಿಸುವಿರೇನನು?ಹೇಳಿ ಇಲ್ಲಿನ ಮಗು ಕೇಳುತ್ತಿದೆ. ನಮ್ಮ ಮುಂದಿನ ಜನಾಂಗಕ್ಕೆ ನಾವು ಏನನ್ನು ಉಳಿಸಿದ್ದೇವೆ? ಭೂಮಿಯ ಮೇಲಿರುವ ಎಲ್ಲವನ್ನೂ ಕಲುಷಿತಗೊಳಿಸಿದ್ದೇವೆ. ಮರಕಡಿದು, ಕಾಡನ್ನು ನಾಡಾಗಿಸಿದ್ದೇವೆ. ಎಲ್ಲೆಂದರಲ್ಲಿ ವಿಷಯುಕ್ತ ತ್ಯಾಜ್ಯವನ್ನು ಕಾರ್ಖಾನೆಗಳಿಂದಲೂ ಹೊರಬಿಟ್ಟು ಭೂಮಿಯನ್ನು ವಿಷಯುಕ್ತವಾಗಿಸಿದ್ದೇವೆ. ಇಷ್ಟಾದ ನಂತರವೂ ಮಗುವಿನ ಕುರಿತಾದ ಜವಾಬ್ಧಾರಿಯೂ ಇಲ್ಲದೇ ನಮ್ಮದೇ ಲೋಕದಲ್ಲಿ ಮುಳುಗಿ ಹೋಗಿರುವ ತಾಯಿ ತಂದೆಯರಿಗೆ ಮಗು ಕೇಳುವ ಪ್ರಶ್ನೆ ಇದುಅಪ್ಪ ಮೊಬೈಲ್‌ನಲ್ಲಿ, ಅಮ್ಮ ಧಾರಾವಾಹಿಯಲ್ಲಿ ಮುಳುಗಿರುವ ಕುರಿತು ಮಗುವಿಗೆ ಬೇಸರವಿದೆ. ಅಜ್ಜ ಅಜ್ಜಿ ವೃದ್ಧಾಶ್ರಮದಲ್ಲಿರುವಾಗ ತನ್ನ ಜೊತೆ ಆಡಲು ಯಾರಿಲ್ಲವೆಂದು ಮಗು ಕೊರಗುತ್ತದೆ. ಇಷ್ಟಾದರೂ ತಂದೆ ತಾಯಿಗಳು ಹೇಳುವ ಒಳ್ಳೆಯ ವಿಷಯಕ್ಕೆ ಮಕ್ಕಳ ಒಪ್ಪಿಗೆ ಇದ್ದೇಇರುತ್ತದೆ.ಉಳ್ಳವರ ಸೊಕ್ಕನು ಮುರಿದುಬಡವರಿಗೆ ಜೊತೆಯಾಗಿಬಸವಣ್ಣನ ಹಾದ್ಯಾಗೆ ನಡಿಯೋ ಮಗನೆಎನ್ನುವ ಮಾತಿಗೆ ಯಾವ ಮಗುವೂ ಇಲ್ಲ ಎನ್ನುವುದಿಲ್ಲ ಎನ್ನುವ ನಂಬಿಕೆ ಕವಿಗೆ ಇದೆ. ಹೀಗಾಗಿ ಮಕ್ಕಳ ಮೇಲೆ ನಂಬಿಕೆ ಇಟ್ಟು ನಡೆಯುವುದೇ ತಂದೆತಾಯಿಗಳಿಗೆ ಹಿತವಾದದ್ದು. ಮಕ್ಕಳನ್ನು ಅವರದ್ದೆ ಕಲ್ಪನೆಯ ಹಾದಿಯಲ್ಲಿ ಬಿಟ್ಟರೆ ಅವರು ಸೂರ್‍ಯ ಚಂದ್ರರನ್ನೂ ಭೂಮಿಗೆ ತಂದು ಕಟ್ಟಿಡಬಲ್ಲರು. ಮೋಡವನ್ನೂ ನಿಯಂತ್ರಿಸಿ ಕಲ್ಲು ಹೊಡೆದು ಮಳೆ ಸುರಿಸಲೂ ಹಿಂದೆ ಮುಂದೆ ನೋಡರು ಇಂದಿನ ಜನಾಂಗ. ಮೋಡದ ರಾಸಿಗೆಕಲ್ಲು ಹೊಡೆದುಆಲಿಕಲ್ಲನು ರಪರಪ ಕೆಡಗೋಣಬೇಕೆಂದಾಗ ಮಳೆಯನು ಪಡೆದುಧಗೆಯನು ಅಟ್ಟೋಣಎಂದು ಹುಮ್ಮಸ್ಸಿನಿಂದ ಹೇಳುವ ಇಂದಿನ ತಲೆಮಾರಿನ ಹುಮ್ಮಸ್ಸಿಗೆ ಕೊನೆ ಎಲ್ಲಿದೆ.  ಸೂರ್‍ಯನನ್ನೂ ಓಡಿಸಿ ಶಾಸ್ವತವಾಗಿ ಚಂದ್ರನೇ ಬೆಳಕು ನೀಡಲಿ, ಈ ಧಗೆ ಸಹಿಸಲಾಗದು ಎನ್ನುವ ಮಕ್ಕಳಿಗೆ ಚಂದ ತಾರೆಯರ ಚಾಡಿ ಮಾತು ಕೇಳುವ ಅಸಮಧಾನವೂ ಇದೆ. ಮನೆಯಲ್ಲಿ ಅಪ್ಪನ ಕೋಪಕ್ಕೆ ಅಮ್ಮ ಚಾಡಿ ಹೇಳುತ್ತಾಲೆ ಎನ್ನುವ ಮಕ್ಕಳ ಮನಸಿನ ಮಾತು ಇದು ಎಂದೇ ನನಗೆ ಓದಿದಾಗಲೆಲ್ಲ ಅನ್ನಿಸಿದೆ. ಚಾಡಿಯ ಹೇಳಲು  ತಾರೆಗಳೆಲ್ಲನಿನ್ನಯ ಹಿಂದೆಯೇ ಕಾದಿವೆ ನೋಡುಎನ್ನುವ ಮಗು ಪೆನ್ಸಿಲ್ ತಪ್ಪು ಬರೆಯಲು ನೀನೇ ಕಾರಣ ಎಂದು ರಬ್ಬರ್ ಗುರಾಯಿಸುವ ಕನಸನ್ನು ತರಗತಿಯಲ್ಲೂ ಕಾಣುವ ಸಾಮರ್ಥ್ಯ ಹೊಂದಿದೆ. ಮಗುವಿನ ಕಲ್ಪನಾ ಶಕ್ತಿಗೆ ಎಲ್ಲಿದೆ ಮಿತಿ? ಪರಿಸರ ಕಾಳಜಿಯ ಕವನಗಳೂ ಇಲ್ಲಿವೆ. ಗುಬ್ಬಿಯ ಮರಿಗಳು ಕಾಂಕ್ರಿಟ್ ಕಾಡಿನಲ್ಲಿ ದಂಗಾಗಿ ಕುಳಿತಿರುವಾಗ ಗುಬ್ಬಿಯು ತನ್ನ ಸಂಸಾರವನ್ನು ಹಳ್ಳಿಗೆ  ಸಾಗಿಸುತ್ತದೆ. ಅಲ್ಲಿಯೂ ಗಿಡಮರಗಳಿಲ್ಲದ್ದನ್ನು ಕಂಡು ಕಾಡೇ ಉತ್ತಮ ಎನ್ನುತ್ತ ಕಾಡಿನ ಕಡೆ ಮುಖ ಮಾಡುತ್ತದೆ. ಇನ್ನೊಂದೆಡೆ  ಮಳೆಯ ಸುರಿಸಲು ಬಳಿ ಬಾ ಎಂದು ಮೋಡವನ್ನು ಕರೆದರೆ ಕಾಡು ಕಡಿದು, ಭೂಮಿಯನ್ನೆಲ್ಲ ಹೊಲಸು ಮಾಡಿದ್ದನ್ನು ವಿರೋಧಿಸುವ ಮೋಡ, ಹಸಿರು ಬೆಳೆಸಿದರೆ ಖಂಡಿತಾ ಬರುತ್ತೇನೆ ಎನ್ನುತ್ತದೆ. ಹಾಗೆ ಬರುವಾಗಲೇ ಮಿಂಚು, ಗುಡುಗು, ಮಳೆಗೆ ಪೈಪೋಟಿಯೂ ಆಗುತ್ತದೆ. ಮಿಂಚಿನ ಬೆಳಕು ಮೊದಲು ಭೂಮಿಗೆ ತಲುಪುತ್ತದೆ, ಗುಡುಗಿನ ಶಬ್ಧ ನಂತರ ಕೇಳಿದರೆ ಮಳೆ ಮೂರನೆ ಸ್ಥಾನವನ್ನು ಪಡೆಯುತ್ತದೆ. ಇಲ್ಲಿ ಬೆಳಕಿನ ವೇಗ ಶಬ್ಧದ ವೇಗಕ್ಕಿಂತ ಹೆಚ್ಚು ಎನ್ನುವ ಸೂಕ್ಷ್ಮ ಪಾಠವೂ ಅಡಗಿಕೊಂಡಿದೆ. ಮತ್ತೊಂದು ಕವನದಲ್ಲೂ ನದಿಯನ್ನು ಕಂಡು ಪ್ರಾಣಿ ಪಕ್ಷಿಗಳೆಲ್ಲ ಖುಷಿಪಡುತ್ತವೆ. ಆದರೆ ಮನುಷ್ಯ ಮಾತ್ರ ಸುತ್ತಲಿನ ಕಾಡು ಕಡಿದು ಗದ್ದೆ ಮಾಡುತ್ತಾನೆ. ಮಳೆ ಕಡಿಮೆಯಾಗಿ ನದಿ ಒಣಗಿ ಹೋಗುತ್ತದೆ ಎನ್ನುವುದನ್ನು ತಿಳಿಸುತ್ತ ಪ್ರಕೃತಿಯಲ್ಲಿ ಮಾನವನ ಹಸ್ತಕ್ಷೇಪ ಹೆಚ್ಚಾಗಬಾರದು ಎನ್ನುತ್ತಾರೆ. ಹೀಗಾಗಿಯೇ ಪುಟ್ಟನು ದೀಪಾವಳಿ ಹಬ್ಬಕ್ಕೂ ಪಟಾಕಿ ಹೊಡೆಯದೇ ಪರಿಸರದ ಬಗ್ಗೆ ಕಾಳಜಿ ತೋರಿಸುವುದನ್ನು ಚಂದದ ಕವಿತೆಯನ್ನಾಗಿಸಿ ಮಕ್ಕಳ ಮನಸ್ಸಿನಲ್ಲಿ ಪರಿಸರದ ಕುರಿತು ಜಾಗ್ರತಿ ಮೂಡಿಸುತ್ತಾರೆ.  ಅಮ್ಮ  ಇಲಿಯ ಕಾಟ ತಾಳದೆ ವಿಷವಿಕ್ಕಿದ್ದನ್ನೂ ಮಗು ಚಿಕ್ಕಿಲಿಗೆ ಹೇಳುತ್ತ, ಬಡವರ ಗೂಡಿಗೆ ಹೋಗಲೇ ಬೇಡ ಎನ್ನುತ್ತದೆ. ತಮ್ಮನಿಗೂ ತಿಂಡಿ ಕೊಡದೆ ತಿಂದ ಗುಂಡನ ಕೈಯ್ಯಿಂದ ತಿಂಡಿ ಎಗರಿಸಿದ ಕಾಗೆ ತನ್ನೆಲ್ಲ ಬಂದು ಬಳಗವನ್ನು ಕರೆದು ಹಂಚಿಕೊಂಡು ತಿನ್ನುತ್ತದೆ. ಇರುವೆ ಒಗ್ಗಟ್ಟಿನ  ಪಾಠ ಹೇಳುತ್ತದೆ. ಕಾಡಿನಲ್ಲಿ ಸಿಗುವ ರುಚಿರುಚಿಯಾದ ಹಣ್ಣು ಬಿಟ್ಟು ಪೇಟೆಗೆ ಬಂದು ಅಂಗಡಿಯಲ್ಲಿ ಕದಿಯುವ ಮಂಗಗಳ ಕುರಿತು ಮಗು ಪ್ರಶ್ನೆ ಕೇಳುತ್ತ ಕಾಡಿನಲ್ಲಿರುವ ಹಣ್ನಿನ ಮರಗಳನ್ನೆಲ್ಲ ಕಡಿದುದ್ದರ ಕುರಿತು ವಿಷಾದ ವ್ಯಕ್ತ ಪಡಿಸುತ್ತದೆ. ಹೀಗೆ ಪರಿಸರದ ಪಾಠ ಹೇಳುತ್ತಲೆ ಅಡುಗೆ ಮನೆಯ ಆಟಗಾರ ಎಂದು ಮಗುವನ್ನು ಕುರಿತೂ ಹೇಳುವ ಕವಿತೆ ಇಲ್ಲಿದೆ. ಅಪ್ಪನ ಹೊಲದಲ್ಲಿ ದುಡಿಯಬೇಕೆನ್ನುವ, ಮನೆಯಲ್ಲಿ ರೋಬೋಟ್ ಜೊತೆ ಆಡುತ್ತಲೇ ಊರಿನ ತೋಟದಲ್ಲಿ ಏನೇನಿದೆ ಎಂದು ತೋರಿಸಲು ತಂದೆಯನ್ನು ಕರೆಯುವ ಮಗುವಿಗೆ ಅಪ್ಪನಂತೆ ಗಡ್ಡ ಮೀಸೆ ಯಾವಾಗ ಬರುವುದು ಎಂದು ಅಮ್ಮನನ್ನು ಕೇಳುತ್ತ ಎದುರು ನೋಡುತ್ತಿದೆ. ತನ್ನ ಶಾಲೆಯಷ್ಟು ಸುಂದವಾದದ್ದು ಬೇರಿಲ್ಲ ಎನ್ನುತ್ತದೆ. ಕಾಡಿಗೆ ಹೋಗಬಯಸುವ, ಸಂತೆಯಲ್ಲಿ ನಲಿದಾಡಲು ಇಷ್ಟಪಡುವ ಮಗುವಿನ ಮನವಿಗೆ ಹಿರಿಯರೆನ್ನಿಸಿಕೊಂಡ ನಾವು ಸ್ಪಂದಿಸಿದ್ದೇವೆಯೇ?      ಭೀಮಲೀಲೆ ಎನ್ನುವ ಅಂಬೇಡ್ಕರರ ಕುರಿತಾದ ಕವನ ಮಕ್ಕಳನ್ನು ಮುಟ್ಟುವಂತಿದೆ. ಓದು ಬರೆಹ ಕಲಿಯದ ಗೋಣಿ ಬಸವನ ಪಾಡನ್ನು ಕಂಡರೆ ಮಗು ಒಂದಿಷ್ಟಾದರೂ ಓದಬೇಕೆಂದು ಬಯಸುವುದು.ಆಕಾಶವನ್ನೇ ಮುಟ್ಟಬಲ್ಲೆವುಏಣಿಯ ನೀಡಿ ಸಹಕರಿಸಿಎಂದು ತಮ್ಮ ಮೇಲೆ ತಾವೇ ಭರವಸೆಯಿಟ್ಟು ಮಗು ಕೇಳುತ್ತಿದೆ.  ಆಕಾಶಕ್ಕೆ ಏರುವ ಮಗುವಿಗೆ ಏಣಿ ಕೊಟ್ಟು ಬೆನ್ನು ತಟ್ಟಬೇಕಾದದ್ದು ಪಾಲಕರು ಮಾಡಲೇ ಬೇಕಾದ ಕರ್ತವ್ಯ.ಬೆನ್ನು ತಟ್ಟಿ ಬೆಂಬಲಿಸಿಬದುಕ ದಾರಿ ತೋರಿಸಿಸೋತರೂ ಗೆಲ್ಲೋ ಕಲೆಯಕಲೀತೀವಿ ಸಹಕರಿಸಿ  ನಮ್ಮ ಮಕ್ಕಳ ಬೆನ್ನು ತಟ್ಟಿ ಯಾವುದು ಒಲ್ಳೆಯದು, ಯಾವುದು ಕೆಟ್ಟದ್ದು ಎಂದು ತಿಳಿಸಿಕೊಳ್ಳಲೇ ಬೇಕಲ್ಲವೇ? ಇಲ್ಲದೇ ಹೋದರೆ ತಪ್ಪು ಸರಿ ಎನ್ನುವುದರ ಅರಿವಾಗುವುದಾದರೂ ಹೇಗೆ? ಅಂತಹ ತಿಳುವಳಿಕೆ ನೀಡಿಲ್ಲದ್ದರಿಂದಲೇ ಸಮಾಜದಲ್ಲಿ ಇಷ್ಟು ಅನ್ಯಾಯ, ಅತ್ಯಾಚಾರಗಳು ಹೆಚ್ಚುತ್ತಿವೆ. ನಾವು ನೀಡುವ ಪಾಠ ಮಕ್ಕಳಲ್ಲಿ ನೈತಿಕತೆಯನ್ನು ತುಂಬಿದರೆ  ಸಮಾಜ ಖಂಡಿತಾ  ಅಧೋಗತಿಗಿಳಿಯಲಾರದು. ಲಿಂಗತ್ವದ ಕಲ್ಪನೆ ಮಾಡಿಕೊಡುವುದು ಹಾಗೂ ಲಿಂಗಬೇಧ ಮಾಡದಂತೆ ನೋಡಿಕೊಳ್ಳುವುದು ನಮ್ಮದೇ ಕರ್ತವ್ಯ.

Read Post »

ಅಂಕಣ ಸಂಗಾತಿ, ಸಂಪ್ರೋಕ್ಷಣ

ಅಶ್ವತ್ಥಮರದ ಮೇಲೊಂದು ಗುಬ್ಬಿಗೂಡು ಈ ಮರ-ಗಿಡಗಳದ್ದು ಒಂದು ವಿಸ್ಮಯದ ಲೋಕ. ಒಂದಿಂಚು ಕತ್ತರಿಸಿದರೆ ನಾಲ್ಕಾರು ಟಿಸಿಲೊಡೆದು ಚಿಗುರಿಕೊಳ್ಳುವ ಗಿಡ ಕಣ್ಣೆದುರೇ ಮರವಾಗಿ ಬೆಳೆದುಬಿಡುವ ಪ್ರಕ್ರಿಯೆಯೊಂದು ಅಚ್ಚರಿ ಮೂಡಿಸುತ್ತದೆ. ಆ ಬೆಳವಣಿಗೆಯ ಬೆರಗಿನ ಲೋಕದಲ್ಲಿ ದಿನಕ್ಕೊಂದು ಹೊಸ ನೋಟ, ನೋಟದಲೊಂದಿಷ್ಟು ಹೊಸ ಅನುಭವಗಳು ಅವಿತು ಕುಳಿತಿರುತ್ತವೆ. ಹಾಗೆ ಅಡಗಿ ಕುಳಿತ ಅನುಭವಗಳೆಲ್ಲ ಸಮಯ ಸಿಕ್ಕಾಗ ಗಾಳಿ-ಬೆಳಕು-ನೆರಳುಗಳೊಂದಿಗೆ ಮಾತುಕತೆ ನಡೆಸುತ್ತ, ಮಳೆಗೊಂದು ಕೊಡೆ ಹಿಡಿದು ಚಲಿಸುತ್ತ ತಮ್ಮ ಇರುವಿಕೆಯನ್ನು ಗಟ್ಟಿಗೊಳಿಸಿಕೊಳ್ಳುತ್ತವೆ. ಗಾಳಿಯೊಂದಿಗೆ ಹಾರಿಬಂದ ಧೂಳಿನ ಕಣವೊಂದು ಎಲೆಯನ್ನಾಶ್ರಯಿಸಿದರೆ, ಬೆಳಕಿನೊಂದಿಗೆ ಬಿಚ್ಚಿಕೊಳ್ಳುವ ಹೂವಿನ ಎಸಳುಗಳು ದುಂಬಿಯನ್ನು ಸೆಳೆಯುತ್ತವೆ; ನೆರಳ ಹುಡುಕಿ ಬಂದ ನಾಯಿಮರಿಯೊಂದು ಮರದ ಬುಡದಲ್ಲಿ ಕನಸ ಕಾಣುತ್ತ ನಿದ್ರಿಸಿದರೆ, ಎಲೆಗಳನ್ನು ತೋಯಿಸಿದ ಮಳೆ ಹನಿಗಳೆಲ್ಲ ಬೇರಿಗಿಳಿದು ನೆಮ್ಮದಿ ಕಾಣುತ್ತವೆ. ಎಲ್ಲ ಕ್ರಿಯೆಗಳನ್ನೂ ತನ್ನದಾಗಿಸಿಕೊಳ್ಳುವ ಮರದ ಆತ್ಮ ನೆಲದೊಂದಿಗೆ ನಂಟು ಬೆಳಸಿಕೊಂಡು ನಿರಾಳವಾಗಿ ಉಸಿರಾಡುತ್ತದೆ.           ಮರವೊಂದು ಬೆಳೆದುನಿಲ್ಲುವ ರೀತಿಯೇ ಹಾಗೆ! ಪ್ರಪಂಚವೇ ತನ್ನದೆನ್ನುವ ಗತ್ತಿನಲ್ಲಿ, ತುಂಡಾಗಿ ಕತ್ತರಿಸಿದರೂ ಮತ್ತೆ ಚಿಗುರುವ ಆತ್ಮವಿಶ್ವಾಸದಲ್ಲಿ, ನೀರೆರೆಯದಿದ್ದರೂ ಮಳೆಯೊಂದು ಬೀಳುವುದೆನ್ನುವ ಭರವಸೆಯಲ್ಲಿ ಬದುಕು ಕಟ್ಟಿಕೊಳ್ಳುವ ಮರ ಕಲಿಸಿಕೊಡುವ ಪಾಠಗಳು ಹಲವಾರು. ಸುತ್ತ ಬದುಕುವವರ ಉಸಿರಾಟಕ್ಕೆ ನೆರವಾಗುತ್ತ, ಕಾಲಕಾಲಕ್ಕೆ ಚಿಗುರಿ ಹೂವು-ಹಣ್ಣುಗಳಿಂದ ನಳನಳಿಸುತ್ತ, ಆಗಾಗ ಭೇಟಿ ನೀಡುವ ಪ್ರಾಣಿ-ಪಕ್ಷಿಗಳನ್ನು ಪ್ರೀತಿಸುತ್ತ, ಮೊಟ್ಟೆಯೊಂದು ಕಣ್ಣುತೆರೆವ ಕ್ಷಣಕ್ಕೆ ಸಾಕ್ಷಿಯಾಗುತ್ತ ತನ್ನದೇ ಜಗತ್ತನ್ನು ಸೃಷ್ಟಿಸಿಕೊಂಡು ಬಾಳಿಬದುಕುವ ಮರ ನಿಸ್ವಾರ್ಥ ಪ್ರಜ್ಞೆಯ ದೃಷ್ಟಾಂತವಾಗಿ ನಿಲ್ಲುತ್ತದೆ. ಮರದ ಸಂವೇದನೆಗೆ ಜಾಗ ನೀಡುವ ನೆಲ ತಾಯಿ ಬೇರಿನೊಂದಿಗೆ ಮಗುವಾಗಿ, ಮಕ್ಕಳನ್ನು ಸಲಹುವ ತಾಯಿಯೂ ಆಗಿ ತನ್ನ ಕರ್ತವ್ಯವನ್ನು ಪೂರೈಸುತ್ತದೆ. ಬೇರು ತನ್ನನ್ನು ಆಶ್ರಯಿಸಿದ ಅಹಂಭಾವದ ಮದ ನೆಲದ ತಲೆಗೇರುವುದಿಲ್ಲ; ಹೂವಾಗಿ ಅರಳುವ ಮೊಗ್ಗಿನ ಕನಸನ್ನು ಬೆಳಕು ತುಂಡರಿಸುವುದಿಲ್ಲ; ಉದುರಿಬಿದ್ದ ಎಸಳುಗಳು ಗಾಳಿಯನ್ನು ಶಪಿಸುವುದಿಲ್ಲ; ಸುರಿವ ಮಳೆ ಚಿಗುರಿಸಿದ ಎಲೆಗಳ ಲೆಕ್ಕವಿಡುವುದಿಲ್ಲ. ಹೀಗೆ ಎಲ್ಲ ಭೌತಿಕ ಲೆಕ್ಕಾಚಾರ, ವ್ಯವಹಾರಗಳಾಚೆ ನಿಲ್ಲುವ ಮರ-ಗಿಡಗಳ ಅನನ್ಯ ಲೋಕ ತರ್ಕಗಳನ್ನೆಲ್ಲ ತಲೆಕೆಳಗಾಗಿಸುತ್ತ ಅನಾವರಣಗೊಳ್ಳುತ್ತದೆ.           ನಮ್ಮ ಸುತ್ತಲಿನ ಪ್ರಪಂಚ ಅನನ್ಯವೆನ್ನುವ ಭಾವನೆ ಮೂಡುವುದು ಅಲ್ಲಿನ ಚಟುವಟಿಕೆಗಳ ನಿರಂತರ ಜೀವಂತಿಕೆಯಿಂದ. ಬರಿಯ ಮಾತಿಗೆ ನಿಲುಕದ, ಒಮ್ಮೊಮ್ಮೆ ವಿವೇಚನೆಗೂ ಎಟುಕದ ಅದೆಷ್ಟೋ ಸಂಗತಿಗಳು ಆವರಣಕ್ಕೊಂದು ವಿಶಿಷ್ಟವಾದ ಸೌಂದರ್ಯವನ್ನು ಒದಗಿಸುತ್ತವೆ. ಆ ಆವರಣದೊಳಗಿನ ಮಾಧುರ್ಯ ಬದುಕಿನ ಒಂದು ಭಾಗವಾಗಿ ನಮ್ಮೊಳಗೆ ಬೇರುಬಿಟ್ಟು, ಹೊಸಹೊಸ ರಾಗಗಳಾಗಿ ಚಿಗುರೊಡೆಯುತ್ತಿರುತ್ತದೆ. ಹಾಗೆ ಗುನುಗುನಿಸುವ ಅಮೂರ್ತ ಸ್ವರಗಳಲ್ಲಿ ಅಶ್ವತ್ಥಕಟ್ಟೆಯೂ ಒಂದು. ಅಜಾನುಬಾಹು ಶರೀರದ, ದೊಡ್ಡ ಕಿರೀಟ ತೊಟ್ಟ ಮಹಾರಾಜನಂತೆ ವಿರಾಜಿಸುವ ಅಶ್ವತ್ಥಮರದ ಕಟ್ಟೆಯೆಂದರೆ ಅದೊಂದು ಸುಭಿಕ್ಷತೆ-ಸಮೃದ್ಧಿಗಳ ಅರಮನೆಯಿದ್ದಂತೆ. ಅಲ್ಲೊಂದು ಮಣ್ಣಿನ ಹಣತೆ ಲಯಬದ್ಧವಾಗಿ ಉರಿಯುತ್ತ ಕತ್ತಲೆಯ ದುಗುಡವನ್ನು ಕಡಿಮೆ ಮಾಡುತ್ತಿರುತ್ತದೆ; ಕಟ್ಟೆಯನ್ನೇರುವ ಮೆಟ್ಟಿಲುಗಳ ಆಚೀಚೆ ಬಿಡಿಸಿದ ಪುಟ್ಟ ಹೂಗಳ ರಂಗೋಲಿಯ ಮೇಲಿನ ಅರಿಸಿನ-ಕುಂಕುಮಗಳು ಬೆಳಗಿನ ಸೂರ್ಯನ ಕಿರಣಗಳಿಗೆ ಹೊಳೆದು ಬಣ್ಣದ ಲೋಕವನ್ನು ತೆರೆದಿಡುತ್ತವೆ; ಸೆರಗನ್ನು ಸೊಂಟಕ್ಕೆ ಸಿಕ್ಕಿಸಿಕೊಂಡು ಭಕ್ತಿಯಿಂದ ಮರವನ್ನು ಸುತ್ತುವ ತಾಯಿಯ ಹಿಂದೊಂದು ಪುಟ್ಟ ಮಗು ಕಾಲ್ಗೆಜ್ಜೆಯ ಸದ್ದು ಮಾಡುತ್ತ ನೆರಳಿನೊಂದಿಗೆ ಆಟವಾಡುತ್ತದೆ; ಮಾಗಿ ಉದುರಿದ ಹಣ್ಣುಗಳೆಲ್ಲ ಆಕಾಶದಿಂದ ಬಿದ್ದ ನಕ್ಷತ್ರಗಳಂತೆ ಭಾಸವಾಗಿ ಅಶ್ವತ್ಥಕಟ್ಟೆಗೊಂದು ದಿವ್ಯವಾದ ಸೌಂದರ್ಯ ಪ್ರಾಪ್ತಿಯಾಗುತ್ತದೆ.           ಹೀಗೆ ಸೌಂದರ್ಯವೆನ್ನುವುದು ಒಮ್ಮೆ ಮರದಡಿಯ ನೆರಳಾಗಿ, ಮತ್ತೊಮ್ಮೆ ಮರದ ಮೇಲಿನ ಹಣ್ಣಾಗಿ, ಸುಶ್ರಾವ್ಯ ಸ್ವರದಂತೆ ನೆಲಕ್ಕಿಳಿವ ಎಲೆಯಾಗಿ ಬಸ್ ಸ್ಟಾಪಿನಲ್ಲಿ ಬಸ್ಸಿಗಾಗಿ ಕಾಯುತ್ತಿರುವವರ ಬೆಳಗಿನೊಂದಿಗೆ ಬೆರೆತು ನೆನಪಿನಲ್ಲಿ ನೆಲೆಗೊಳ್ಳುತ್ತದೆ. ಹಾಗೆ ಕಾಯುತ್ತಿರುವವರ ಪರ್ಸಿನಲ್ಲೊಂದು ಮರದ ತೊಟ್ಟಿಲಿನಲ್ಲಿ ಮಲಗಿ ಹಾಯಾಗಿ ನಿದ್ರಿಸುತ್ತಿರುವ ಪುಟ್ಟ ಮಗುವಿನ ಕಪ್ಪು-ಬಿಳುಪು ಭಾವಚಿತ್ರ ಬಣ್ಣದ ಕನಸುಗಳನ್ನು ಚಿತ್ರಿಸುತ್ತಿರಬಹುದು; ವೀಳ್ಯದೆಲೆ ಮಾರುವವನ ಗೋಣಿಚೀಲದೊಳಗೆ ಶಿಸ್ತಿನಿಂದ ಕುಳಿತ ಎಲೆಗಳು ಬಾಡಿಹೋಗುವ ಭಯವಿಲ್ಲದೇ ಒಂದಕ್ಕೊಂದು ಅಂಟಿಕೊಂಡಿರಬಹುದು; ಕಾಲೇಜು ಹುಡುಗಿಯ ಪುಸ್ತಕದೊಳಗಿನ ಒಣಗಿದ ಗುಲಾಬಿ ಎಲೆಗಳ ನೆನಪು ಸದಾ ಹಸಿರಾಗಿ ಚಿಗುರುತ್ತಿರಬಹುದು; ಹೈಸ್ಕೂಲು ಹುಡುಗನ ಡ್ರಾಯಿಂಗ್ ಹಾಳೆಯ ಮೇಲಿನ ಅಶ್ವತ್ಥಎಲೆಯೊಂದು ಬಣ್ಣ ತುಂಬುವ ಪೀರಿಯಡ್ಡಿಗಾಗಿ ಕಾಯುತ್ತಿರಬಹುದು; ಅಮ್ಮನಮನೆಯ ದೇವರಕಾರ್ಯಕ್ಕೆಂದು ಬಸ್ಸನ್ನೇರುತ್ತಿರುವ ಪ್ಲಾಸ್ಟಿಕ್ ಕವರಿನ ಮುಷ್ಟಿಮಣ್ಣಿನಲ್ಲಿ ನಾಗದಾಳಿಯ ಚಿಗುರೊಂದು ಬೇರುಬಿಡುತ್ತಿರಬಹುದು. ಹಾಗೆ ಪ್ರತಿದಿನವೂ ಚಲಿಸುವ ಬೆಳಗುಗಳಿಗೆ ಸಾಕ್ಷಿಯಾಗುವ ಬಸ್ ಸ್ಟಾಪಿನೆದುರಿಗಿನ ಮರ ಮಾತ್ರ ನಿಂತಲ್ಲಿಯೇ ಬೆಳೆಯುತ್ತ, ಹೊಸ ಗೂಡುಗಳಿಗೆ ಆಶ್ರಯ ನೀಡುತ್ತ ನೆನಪುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ.           ಈ ನೆನಪುಗಳು ಬೇರುಬಿಡುವ ವಿಧಾನವೂ ವಿಶಿಷ್ಟವಾದದ್ದು. ಮನದಾಳಕ್ಕೆ ಬೇರನ್ನಿಳಿಸದ ನೆನಪುಗಳು ಮುಗುಳ್ನಗೆಯ ಖಾಸಗಿ ಕ್ಷಣಗಳನ್ನು ತಮ್ಮದಾಗಿಸಿಕೊಳ್ಳಲಾರವು. ನಗಣ್ಯವೆನ್ನಿಸುವ ಎಷ್ಟೋ ಸಂಗತಿಗಳು ಕಾಲಕಳೆದಂತೆ ಅತ್ಯಮೂಲ್ಯವೆನ್ನುವಂತಹ ನೆನಪುಗಳಾಗಿ ಬದಲಾಗುವುದುಂಟು; ಅಪರೂಪದ್ದೆನ್ನುವಂತಹ ಘಟನೆಗಳೂ ಕೆಲವೊಮ್ಮೆ ಕೇವಲ ಫೋಟೋ ಆಲ್ಬಮ್ಮುಗಳಲ್ಲೋ, ಮೊಬೈಲ್ ಗ್ಯಾಲರಿಯ ಯಾವುದೋ ಮೂಲೆಯಲ್ಲೋ ಉಳಿದುಹೋಗುವುದುಂಟು. ತೋಟದಂಚಿನ ಹೊಳೆಯಲ್ಲಿ ಸ್ನಾನದ ಟವೆಲ್ಲಿನಿಂದ ಹಿಡಿದ ಮೀನಿನ ಮರಿಗಳನ್ನು ಮನೆಯ ಪಕ್ಕದ ಕೆರೆಗೆ ತಂದು ಬಿಡುತ್ತಿದ್ದ ಕಾಲಹರಣದ ಕೆಲಸವೊಂದು ಎಂದೆಂದಿಗೂ ಮರೆಯಲಾಗದ ನೆನಪುಗಳ ಸಾಲಿನಲ್ಲಿ ಸೇರಿಕೊಳ್ಳಬಹುದೆಂಬ ಯೋಚನೆ ಕೂಡಾ ಬಾಲ್ಯಕ್ಕೆ ಇರಲಿಕ್ಕಿಲ್ಲ. ಸೂರ್ಯೋದಯದ ಫೋಟೋದ ಹಿಂದೆ ಮನೆ ಮಾಡಿಕೊಂಡಿದ್ದ ಗುಬ್ಬಚ್ಚಿಯ ಸಂಸಾರವೊಂದು ದಿನ ಬೆಳಗಾಗುವಷ್ಟರಲ್ಲಿ ಜಗುಲಿಯನ್ನು ತೊರೆದು ಹಾರಿಹೋಗುವುದಕ್ಕಿಂತ ಮುಂಚೆ, ಬದುಕಿನ ಅತಿ ಸುಂದರ-ರೋಮಾಂಚಕ ದೃಶ್ಯಗಳೆಲ್ಲ ಕ್ಷಣಾರ್ಧದಲ್ಲಿ ನೆನಪುಗಳಾಗಿ ರೂಪ ಬದಲಾಯಿಸಿಬಿಡಬಹುದೆನ್ನುವ ಕಲ್ಪನೆ ಯಾರ ಕಣ್ಣಳತೆಗೂ ದಕ್ಕಿರಲಿಕ್ಕಿಲ್ಲ. ಗೇರುಮರಕ್ಕೆ ಆತುಕೂತು ಇಂಗ್ಲಿಷ್ ಪದ್ಯವನ್ನು ಬಾಯಿಪಾಠ ಮಾಡಿದ್ದು, ಅತ್ತಿಮರದ ಬೇರಿನ ಮೇಲೆ ಕುಳಿತು ಹೊಳೆಯ ನೀರಿನಲ್ಲಿ ಕಾಲುಗಳನ್ನು ಇಳಿಬಿಟ್ಟು ಡೆಬಿಟ್ಟು-ಕ್ರೆಡಿಟ್ಟುಗಳನ್ನು ಬ್ಯಾಲೆನ್ಸ್ ಮಾಡಿದ್ದು ಹೀಗೆ ಎಲ್ಲ ನೆನಪುಗಳೂ ನೆಲದಾಳಕ್ಕೆ ಬೇರುಬಿಟ್ಟು ನೆಮ್ಮದಿಯ ಬದುಕು ಕಾಣುತ್ತವೆ.           ಹಾಗೆ ಬೇರುಬಿಟ್ಟ ಬದುಕು ನೆಲದುದ್ದಕ್ಕೂ ಹರಡಿಕೊಂಡು ಗಿಡವಾಗಿ ಚಿಗುರಿ, ಮರವಾಗಿ ಬೆಳೆದು ನಿಲ್ಲುತ್ತದೆ. ಹಾಗೆ ಬೆಳೆದು ನಿಂತ ಮರದ ರೆಂಬೆಯಲ್ಲೊಂದು ಕನಸುಗಳ ಜೋಕಾಲಿ ಕುಳಿತವರನ್ನೆಲ್ಲ ಜೀಕುತ್ತಿರುತ್ತದೆ; ಪೊಟರೆಯಲ್ಲೊಂದು ಪುಟ್ಟ ಹೃದಯ ಬಚ್ಚಿಟ್ಟ ಭಾವನೆಗಳೊಂದಿಗೆ ಬೆಚ್ಚಗೆ ಕುಳಿತಿರುತ್ತದೆ; ಜಗದ ಸದ್ದಿಗೆ ತಲ್ಲಣಗೊಳ್ಳದ ಎಲೆ ಆಗಸದೆಡೆಗೆ ಮುಖ ಮಾಡಿ ಭರವಸೆಯನ್ನು ಚಿಗುರಿಸುತ್ತದೆ; ಜೀವಶಕ್ತಿಯ ಮೋಹಕ ಕುಂಚ ಒಡಮೂಡಿದ ಮೊಗ್ಗಿನ ಮೇಲೆ ಬಣ್ಣದ ಎಳೆಗಳನ್ನೆಳೆಯುತ್ತದೆ; ಅರಳಿದ ಹೂವಿನ ಗಂಧ ಗಾಳಿಯೊಂದಿಗೆ ಬೆರೆತು ಹಗುರಾಗಿ ತೇಲುತ್ತ ಮೈಮರೆಯುತ್ತದೆ; ಬಲಿತ ಬೀಜ ಬಯಲ ಸೇರುವ ಹೊತ್ತು ಜಗುಲಿಯಿಂದ ಹಾರಿಬಂದ ಗುಬ್ಬಿಯ ಗೂಡು ಮರದ ಮಡಿಲು ಸೇರುತ್ತದೆ. ******************************** ಮೂಲತ: ಉತ್ತರ ಕನ್ನಡದವರಾದ ಅಂಜನಾ ಹೆಗಡೆಯವರು ಸದ್ಯ ಬೆಂಗಳೂರಲ್ಲಿ ನೆಲೆಸಿರುತ್ತಾರೆ. ‘ಕಾಡ ಕತ್ತಲೆಯ ಮೌನ ಮಾತುಗಳು’ ಇವರು ಪ್ರಕಟಿಸಿದ ಕವನಸಂಕಲನ.ಓದು ಬರಹದ ಜೊತೆಗೆ ಗಾರ್ಡನಿಂಗ್ ಇವರ ನೆಚ್ಚಿನ ಹವ್ಯಾಸ

Read Post »

ಕಾವ್ಯಯಾನ

ಟೈಂ ಮುಗಿಸಿದ ಸಮಯ…..

ಕವಿತೆ ಡಾ.ಪ್ರೇಮಲತ ಬಿ ಕೆಲವರಿಗೆ ಸಮಯವಿರುವುದಿಲ್ಲಸಮಯ ಮಾಡಿಕೊಳ್ಳಲು ಸಮಯ ಸಾಕಾಗುವುದಿಲ್ಲನನ್ನ ಬಳಿ ಬಹಳ ಸಮಯವಿದೆಆಳ ಗೆರೆಗಳ ನನ್ನ ಕೈ ಖಾಲಿಯಿದೆ ಹಾಗೆಂದೇ ಸಮಯವನ್ನು ಕೊಲ್ಲಲು ನನ್ನ ಬಳಿಅಸಾಧ್ಯ ಸಾಧ್ಯತೆಗಳಿವೆ ಆದರೆಹಾಗೊಮ್ಮೆ, ಹೀಗೊಮ್ಮೆ ತೂಗುವ ಲೋಲಕದನನ್ನ ಗಡಿಯಾರಕ್ಕೆ ಮುಳ್ಳುಗಳಿಲ್ಲ ಅನಂತ ಚಲನೆಗಳ ಸಂವೇದನೆಯಿಲ್ಲಕೊಂದದ್ದೇನು ತಿಳಿಯುವುದಿಲ್ಲಟಿಕ್-ಟಿಕ ನೆಂದು ಉಲಿದು ಹೇಳಲುನನ್ನೆದೆ ಗಡಿಯಾರಕ್ಕೆ ಧ್ವನಿಯಿಲ್ಲ ರಸ್ತೆಯಲಿ ನಿಂತ ಒಂಟಿ ಜೀವಸಂತೆಯಲ್ಲಿದ್ದರೂ ಕೇಳುವ ನಿರಂತರ ಮೌನಸಮಯದ್ದೇನು ನನಗೆ ಮುಲಾಜುಸಮಯ ಪ್ರಜ್ಞೆಆಳುವುದಿಲ್ಲ ಅವಸರ ಬದುಕ ಕಾಡುವುದಿಲ್ಲಸಮಯ ಕೊಂದ ಪಾಪಪ್ರಜ್ಞೆಯಿಲ್ಲಅರ್ಥಗಳ ಟೈಂ ಮುಗಿಸಿದ ಸಮಯ ನನ್ನೆದುರು ಈಗ ಸತ್ತು ಬಿದ್ದಿದೆಯಲ್ಲ ! **************************************

ಟೈಂ ಮುಗಿಸಿದ ಸಮಯ….. Read Post »

ಕಾವ್ಯಯಾನ

ನೈವೇದ್ಯ

ಕವಿತೆ ನೈವೇದ್ಯ ಡಾ.ಕಾತ್ಯಾಯಿನಿ ಕುಂಜಿಬೆಟ್ಟು. ಮೂರು ಕಲ್ಲುಗಳ ಒಲೆನನ್ನ ಮನಸ್ಸು!ಹಳದಿ ಮೈಯ ಕೆಂಪು ನಾಲಗೆಯನ್ನುಊರ್ಧ್ವಕ್ಕೆ ಕೊರಳುದ್ದಕ್ಕೂ ಚಾಚಿ ಚಾಚಿಕಾಯಮಡಕೆಯನ್ನು ನೆಕ್ಕುತ್ತಿರುತ್ತದೆಬೆಂಕಿಬಾಳು! ಒಂದು ದೀರ್ಘ ಕಾಯುವಿಕೆಯಲ್ಲಿಪ್ಲುತಕಾಲಗಳ ಬೇಯುವಿಕೆ…ಅಕ್ಕಿ ಗುಳುಗುಳು ಕುದಿಯುತ್ತ ಅಂಗುಳಅಗುಳು ಅಗುಳೂ ಅನ್ನವಾಗುತ್ತದೆಆಹಾ! ಉದುರುದುರು ಮಲ್ಲಿಗೆ ಹೂವು!ಬಟ್ಟಲು ತುಂಬ ಹರಿದಾಡುವ ಮುತ್ತು!ಅನ್ನ ಜೀವವಾಗುತ್ತದೆ… ಪರಮ ಅನ್ನ! ಬ್ರಹ್ಮ ವಿಷ್ಣು ಮಹೇಶ್ವರ ಪುಟುಪುಟುಅಂಬೆಗಾಲಿಡುತ್ತಿದ್ದಾರೆ…ಚಿಗುರು ಬೆರಳ ಚುಂಚದಲ್ಲಿ ಹೆಕ್ಕಿ ಹೆಕ್ಕಿಬಾಯಿ ಬ್ರಹ್ಮಾಂಡದಲ್ಲಿ ತುಂಬಿಕೊಳ್ಳಲು!ಒಬ್ಬನ ಕೈಯ ಕೆಂದಾವರೆಗೆಮತ್ತೊಬ್ಬನ ಹೊಕ್ಕುಳ ಕುಂಡದ ದಂಟಲ್ಲಿ ನಗುಹುಟ್ಟಿಗೆ ಬದುಕಿನ ನಂಟು!ಹೊಕ್ಕುಳಬಳ್ಳಿ… ಅಮೃತಬಳ್ಳಿ! ಮಗದೊಬ್ಬನ ನೊಸಲಲಿ ಒಲೆಯಬೂದಿಯೆ ವಿಭೂತಿ! ಕಾಯಮಡಕೆಯಲ್ಲಿನನ್ನ ಪ್ರಾಣವೀಗಅನ್ನ ನೈವೇದ್ಯ! ***************************

ನೈವೇದ್ಯ Read Post »

You cannot copy content of this page

Scroll to Top