ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕವಿತೆಯೆಂದರೆ

ಕವಿತೆ ಪ್ರೇಮಶೇಖರ ಕವಿತೆಯೆಂದರೆ ಏನು?ಏನಲ್ಲ? ಕವಿತೆಯೆಂದರೆ ಕತ್ತಲೆಬೆಳಕಿನಾಟದ ಜೀವನರಂಗಮಂಚ. ಕವಿತೆಯೆಂದರೆ ಸಮುದ್ರತೀರದ ಸತ್ತ ಮೀನುಅರಳಿಸುವ ಮಲ್ಲಿಗೆಸುವಾಸನೆ, ಕವಿತೆಯೆಂದರೆ ಹೆಣ್ಣುನಾಗರಇಟ್ಟ ನೂರೊಂದು ಮೊಟ್ಟೆಗಳೊಡೆದು ಬಂದನವಿಲುಗರಿಗಳು. ಕವಿತೆಯೆಂದರೆ ಪ್ರೇಯಸಿಕೊಟ್ಟ ಮುತ್ತುಒಡೆದುಹೋಗಿಧಾರಾವಾಹಿಯಾದ ನಿರೀಕ್ಷೆ. ಕವಿತೆಯೆಂದರೆ ಬೀಸಣಿಗೆಯ ಬಣ್ಣದ ರೆಕ್ಕೆಯ ಗಿಣಿಮರಿಗೆ ಮಾತು ಕಲಿಸಹೊರಟಮಗು. ಕವಿತೆಯೆಂದರೆ ನಾಳೆಹಾರಿ ಹೋಗುತ್ತದೆಎಂದು ಗೊತ್ತಿದ್ದರೂ ಇಂದುಗುಟುಕು ನೀಡುವತಾಯಿಹಕ್ಕಿ. ಕವಿತೆಯೆಂದರೆ ಅಕ್ಷತಯೋನಿಒಂಬತ್ತು ಹೆತ್ತು ಮೂಲೆಯಲ್ಲಿಕೂತ ಅಡುಗೂಲಜ್ಜಿಕತೆ. ಕವಿತೆಯೆಂದರೆ ತಾಯಿಹುಲ್ಲೆಯನು ಕೊಂದುತಿಂದುಎಳೆಹುಲ್ಲೆಗೆ ತಾಯಿಯಾಗಿ ಹಾಲೂಡಿಸಿದ ಹೆಣ್ಣುಹುಲಿ. ಕವಿತೆಯೆಂದರೆಕೊನೆಗೂ ಏನುಂಟು?ಏನಿಲ್ಲ? ಅಹ್ ಕವಿತೆಯೇ ಅಂತಿಮವಾಗಿ ನೀನೇ ಎಲ್ಲ,ನಾನೆಲ್ಲೂ ಇಲ್ಲ. **********************

ಕವಿತೆಯೆಂದರೆ Read Post »

ಕಾವ್ಯಯಾನ

ಚೈತ್ರಾ ಕಾವ್ಯಗುಚ್ಛ

ಚೈತ್ರಾ ಶಿವಯೋಗಿಮಠ ಕಾವ್ಯಗುಚ್ಛ ಕೊರೋನಾ ಖೈದಿ ದಿನ ರಾತ್ರಿಗಳಿಗೆ ವ್ಯತ್ಯಾಸವೇ ಇಲ್ಲಉದಯಾಸ್ತಮಾನಗಳ ನಡುವೆಭೂಮ್ಯಾಕಾಶದ ಅಂತರ.ಗಡಿಯಾರದ ಮುಳ್ಳುಗಳುಅಪೌಷ್ಟಿಕತೆಯಿಂದ ನರಳುತ್ತಿವೆಚಲನೆ ಅದೆಷ್ಟು ಕ್ಷೀಣವೆಂದರೆಒಂದು ಹೆಜ್ಜೆ ಇಡಲೂ ಆಗದ,ಕೀಲಿಲ್ಲದ ಮುದುಕಿಯ ಹಾಗೆಕೈಲಾಗದಿದ್ದರೂ ಬೊಬ್ಬಿಡುವುದಕೇನೂಕಡಿಮೆ ಇಲ್ಲ ‘ಟಿಕ್’ ಎಂಬ ಶಬ್ದಮಾತ್ರ ಕಿವಿಯೊಳಗೆ ಕಾದ ಸೀಸಹೊಯ್ದಷ್ಟು ಕಠೋರ. ಆಗೊಮ್ಮೆ-ಈಗೊಮ್ಮೆನರ್ಸಗಳ ಅಡ್ಡಾಡುವಿಕೆ ಮಾತ್ರನಾನಿನ್ನೂ ಮನುಷ್ಯರ ನಡುವಿರುವುದಕೆಪುರಾವೆ.ಖಾನೆಯೊಳಗೆ ಖಾಲಿತನ ತುಂಬಿಉಸಿರಾಟದ ಭದ್ರತೆ ಕಾಯ್ದುಕೊಂಡು ಏಳು ದಿನಗಳನ್ನಏಳು ವರ್ಷಗಳಂತೆ ಕಳೆದು ಬರುವ ಖೈದಿ! ಕಣ್ಣಾಮುಚ್ಚಾಲೆ ತಪ್ಪಿಸಿಕೊಳ್ಳುವುದಕ್ಕೆ ಹೇಳುತ್ತಿದ್ದ ಕುಂಟುನೆಪಗಳಿಂದು ಬಂಧಿಸುವುದಕ್ಕೆಬರುವ ಭಟನಂತೆ.ಜ್ವರವೆಂದು ನರಳುವ ಹಾಗಿಲ್ಲರಾಕ್ಷಸನಂತೆ ಹಗಲಿರುಳೆನ್ನದೆ ದುಡಿದುಒಂದೆರಡು ದಿನವೂ ಮೈಕೈ ನೋವೆಂದುಒದ್ದಾಡುವ ಹಾಗಿಲ್ಲ. ಎಲ್ಲ ರಸ್ತೆಗಳೂಅಲ್ಲಿಗೆ ಎಳೆದುಕೊಂಡು ಹೋಗುತ್ತಿವೆ.ಕಾಲು ಕಿತ್ತು ರಸ್ತೆ ಬದಲಿಸಿದರೂ ಅವುಒಯ್ಯುವುದು ಅಲ್ಲಿಗೇ!ಎಲ್ಲಿಯೂ ಹೋಗದೆ ಒಳಗಿರಲುನನ್ನ ದಾಸ್ತಾನು ಅಕ್ಷಯಪಾತ್ರೆಯೇ?ದುಡಿದು ತುತ್ತಿನ ಚೀಲ ತುಂಬಿಸಿಯೇನೆಂದರೆಎಲ್ಲಿಂದಲೋ ಹಾರಿ ಬಂದು ಕತ್ತುಹಿಸುಕುವ ಅಣುರಕ್ಕಸ. ಎಷ್ಟು ದಿನಈ ಕಣ್ಣಾಮುಚ್ಚಾಲೆಯೋ ? ಕಾಲ ಮುಟ್ಟಿದರೆ, ಮುತ್ತಿಟ್ಟರೆ ಹೆಚ್ಚುತ್ತಿದ್ದಿದ್ದುಪ್ರೀತಿ ಒಲವುಗಳು ಮಾತ್ರ.ಸುರಿವ ಕಣ್ಣೀರಿಗೆ ಅಣೆಕಟ್ಟಾಗಿದ್ದುನೇವರಿಕೆ, ತೆಕ್ಕೆಯ ಮೃದು ಅಪ್ಪುಗೆಕಳೇಬರಕ್ಕೆ ಕೊನೆ ಪೂಜೆಯೇಕಳೆಯಂತೆ, ಕೊನೆಯದಾಗಿ ತಬ್ಬಿಬಿದ್ದು ಹೊರಳಾಡಿ ಅತ್ತರೂ ತೃಪ್ತಿನೀಡುತ್ತಿರಲಿಲ್ಲ ಬೀಳ್ಕೊಡುಗೆ.ತಂದೆ- ತಾಯಿ ಮಕ್ಕಳೆಲ್ಲ ಒಂದೆಡೆಸೇರಿ ಸಂಭ್ರಮಿಸುತ್ತಿದ್ದಿದ್ದು ಹಬ್ಬಗಳುಒಬ್ಬರಿಗೊಬ್ಬರಾದಾಗ ಹರಡುತ್ತಿದ್ದಿದ್ದುಭ್ರಾತೃತ್ವ, ಒಂದೆಂಬ ಭಾವಎಲ್ಲಿಯೋ ಏನೋ ಅವಘಡವಾದರೆಮರುಗುತ್ತಿದ್ದಿದ್ದು ಮೃದು ಮನ. ಎಲ್ಲವೂ ಗತ ವೈಭವವೀಗಮುಟ್ಟುವ ಹಾಗಿಲ್ಲ ತಟ್ಟುವ ಹಾಗಿಲ್ಲನೇವರಿಸಿ ಸಂತೈಸಿದರೆ ಹರಡುವುದುಖಾಯಿಲೆ ಮಾತ್ರ!ಸಂಸ್ಕಾರ ಕಾಣದ ಶವಗಳ ಕನಿಷ್ಠಒಮ್ಮೆ ಕಂಡರೂ ಸೌಭಾಗ್ಯತಂದೆ ತಾಯಿ ಮಕ್ಕಳು ದಿಕ್ಕಿಗೊಬ್ಬರಂತೆಒಬ್ಬರಿಗೊಬ್ಬರಾದರೆ ಹರಡುವುದುಪಿಡುಗಂತೆದಿನವೂ ಒಂದೇ ರುಚಿ ನಾಲಿಗೆಯದುಡ್ಡು ಬೀಳಿಸಿದಂತೆ, ಎಂತಹ ಅನಾಹುತಕ್ಕೂಮನಗಳು ಈಗ ಮರಗಟ್ಟಿ ಹೋಗಿವೆ *************************

ಚೈತ್ರಾ ಕಾವ್ಯಗುಚ್ಛ Read Post »

ಇತರೆ, ಜೀವನ

ಇತರೆ

ರೈತರ ಆಪತ್ಭಾಂದವ ಜೋಕಪ್ಪನೂ..! ಮಳೆ ತರುವ ದೇವರು ಜೋಕುಮಾರಸ್ವಾಮಿ. ಗಣೇಶ ಶಿಷ್ಟ ಪರಂಪರೆಯ ದೇವರು. ಅಲ್ಲದೇ ಜಾನಪದರ ದೇವರು ಜೋಕುಮಾರಸ್ವಾಮಿ.ಗಣೇಶ ಹೊಟ್ಟೆ ತುಂಬ ಉಂಡು ಭೂಲೋಕದಲ್ಲಿ ಎಲ್ಲವೂ ಸೌಖ್ಯವಾಗಿದೆ ಎಂದು ತನ್ನ ತಂದೆತಾಯಿಗಳಾದ ಶಿವ-ಪಾರ್ವತಿಯರಿಗೆ ವರದಿ ಒಪ್ಪಿಸಿದರೆ, ಜಾನಪದರ ದೇವರು ಜೋಕುಮಾರಸ್ವಾಮಿ ಇಲ್ಲಿ ಮಳೆ, ಬೆಳೆ ಇಲ್ಲದೇ ಕಂಗಾಲಾಗಿರುವ ಜನತೆಯ ಕಷ್ಟ ಕಾರ್ಪಣ್ಯಗಳ ವರದಿ ನೀಡಿ ಮಳೆ ಸುರಿಸಲು ವಿನಂತಿಸಿಕೊಳ್ಳುತ್ತಾನೆ. ಹೀಗಾಗಿಯೇ ಜೋಕುಮಾರಸ್ವಾಮಿ ಒಕ್ಕಲಿಗರಿಗೆ ಮಳೆ ತರುವ ನಂಬಿಗಸ್ತ ದೇವರು. ‘ಜೋಕುಮಾರಸ್ವಾಮಿ ಮಳಿ ಕೊಡಾವ ನೋಡ್ರೀ’ ಎಂದು ರೈತರು ಎದೆ ತಟ್ಟಿ ಹೇಳುತ್ತಾರೆ. ಭಾದ್ರಪದ ಮಾಸದ ಅಷ್ಟಮಿಯ ದಿನದಂದು ಹುಟ್ಟಿದ ಜೋಕುಮಾರ ‘ಜೋಕಪ್ಪ’ ಎಂಬ ಮುನಿಯ ಮಗನೆಂದೂ, ಜೇಷ್ಠಾ ದೇವಿಯ ಮಗನೆಂದೂ ಹೇಳಲಾಗುತ್ತಿದೆ. ಹುಟ್ಟಿದೊಡನೆ ಆತ ತನ್ನ ಕಾಮುಕ ಪ್ರವೃತ್ತಿಯಿಂದ ಊರವರಿಗೆಲ್ಲ ಹೊರೆಯಾಗಿ ಹೋಗುತ್ತಾನೆ. ಜೋಕುಮಾರನನ್ನು ಹೊತ್ತು ತರುವ ಬುಟ್ಟಿಯಲ್ಲಿ ಯಥೇಚ್ಛವಾಗಿ ಬೇವಿನ ಸೊಪ್ಪನ್ನಿಟ್ಟಿರುತ್ತಾರೆ. ಹಾಗಾಗಿಯೇ ದುರ್ಮರಣಕ್ಕೀಡಾದವರನ್ನು ಬೇವಿನ ಸೊಪ್ಪು ಮುಚ್ಚಿ ಶವ ಸಾಗಿಸಲಾಗುತ್ತದೆ. ಆ ಕಾರಣವಿಟ್ಟುಕೊಂಡೇ ಹಳ್ಳಿಯಲ್ಲಿ ತಮ್ಮೂರಿನ ಉಡಾಳರಿಗೆ, ಗೂಂಡಾಗಳಿಗೆ, ಫಟಿಂಗರಿಗೆ ‘ಅಂವಾ ಹೊಕ್ಕಾನಳ ಬೇವಿನ ತೊಪ್ಪಲ ದೊಳ್ಗ’ ಎಂದು ಎಚ್ಚರಿಕೆಯ ಮಾತುಗಳನ್ನು ಹೇಳುತ್ತಿರುತ್ತಾರೆ. ಇಂಥ ಜೋಕುಮಾರ ಹುಟ್ಟುವುದು ವಿಶ್ವಕರ್ಮರ ಮನೆಯಲ್ಲಿ. ಮಣ್ಣಿನಿಂದ ತಿದ್ದಿ, ತೀಡಿದ ಅತ್ಯಂತ ಚೆಲುವಿನಿಂದ ಕೂಡಿದ ಮೂರ್ತಿ ಇದಾಗಿರುತ್ತದೆ. ಮೂರ್ತಿ ಮಾಡಿದವರಿಗೆ ಕೊಡಬೇಕಾದ ಗೌರವ ಧನದೊಂದಿಗೆ ಎಲೆ. ಅಡಿಕೆ, ಉಲುಪಿ (ಹಿಟ್ಟು, ಬೇಳೆ, ಬೆಲ್ಲ, ಅಕ್ಕಿ) ಕೊಟ್ಟು ಪೂಜಿಸಿ ಬುಟ್ಟಿಯಲ್ಲಿಟ್ಟುಕೊಂಡು ಮೊದಲು ಗೌಡರ ಮನೆಗೆ ತರುತ್ತಾರೆ. ಗೌಡರ ಮನೆಯಲ್ಲಿ ಪೂಜೆಯಾದನಂತರ ಅವರು ಕೊಡುವ ಬಿಳಿ ಬಟ್ಟೆಯನ್ನು ಜೋಕುಮಾರನಿಗೆ ಹೊದಿಸಿ ಬೆಣ್ಣೆಯನ್ನು ಬಾಯಿಗೆ ಸವರಿ ಏಳು ದಿನಗಳ ಕಾಲ ಊರಿನ ಪ್ರತಿ ಮನೆಮನೆಗೂ ಜೋಕುಮಾರನನ್ನು ಕರೆದುಕೊಂಡು ಹೋಗುತ್ತಾರೆ. ವಾಲ್ಮೆಕಿ ಜನಾಂಗದ, ಕೋಲಕಾರ, ಕಬ್ಬಲಿಗರ, ಅಂಬಿಗರ ಜನಾಂಗದ ಮಹಿಳೆಯರೇ ಹೆಚ್ಚಾಗಿ ಈ ಜೋಕುಮಾರನನ್ನು ಹೊತ್ತು ತಿರುಗುವ ಉಸ್ತುವಾರಿ ನೋಡಿಕೊಳ್ಳುತ್ತಾರೆ. ಪ್ರತಿ ಮನೆಗೆ ಹೋದಾಗ ಕಟ್ಟೆಯ ಮೇಲೆ ಜೋಕುಮಾರನನ್ನು ಇಟ್ಟು ಆತನಿಗೆ ಸಂಬಂಧಿಸಿದ ಹಾಡುಗಳನ್ನು ಹೇಳುತ್ತಾರೆ. ಆ ಹಾಡುಗಳಲ್ಲಿ ಆತನ ಜನನ, ಉಡಾಳತನ, ಆತನ ಕೊಲೆ, ನಂತರದಲ್ಲಿ ‘ಅಡ್ಡಡ್ಡ ಮಳೆಯಾಗಿ, ಗೊಡ್ಡೆಮ್ಮೆ ಹೈನಾಗಿ’ ಎಲ್ಲವೂ ಆ ಹಾಡಿನಲ್ಲಿ ಬರುತ್ತವೆ. ಮನೆಯವರು ಕೊಡುವ ಜೋಳಕ್ಕೆ ಪ್ರತಿಯಾಗಿ ಮೊರದಲ್ಲಿ ಐದಾರು ಕಾಳು ಜೋಳ, ಬೇವಿನ ಸೊಪ್ಪು, ಒಂದಿಷ್ಟು ನುಚ್ಚನ್ನು ಇಡುತ್ತಾರೆ. ಜೋಳದ ಕಾಳನ್ನು, ಬೇವಿನ ಸೊಪ್ಪನ್ನು ಕಾಳಿನ ಸಂಗ್ರಹದಲ್ಲಿ ಹಾಕುತ್ತಾರೆ. ಹೀಗೆ ಮಾಡುವುದರಿಂದ ಪೈರುಗಳು ಹುಲುಸಾಗುತ್ತವೆ ಎಂಬ ನಮ್ಮ ‘ಜನಪದ’ರದು. ಧಾನ್ಯಗಳಿಗೆ ಹುಳು ಬಾಧೆ ಕಾಣಿಸಿಕೊಳ್ಳುವುದಿಲ್ಲ ಎನ್ನುವುದು ರೈತರ ನಂಬಿಕೆ. ಬೇವಿನ ಸೊಪ್ಪು ಕಹಿಯಾದ ಹಾಗೂ ಔಷಧೀಯ ಗುಣವಿರುವ ಸೊಪ್ಪು.ಊರಲ್ಲಿ ಹೀಗೆಯೇ ಏಳು ದಿನ ತಿರುಗಾಡಿದನಂತರ ತಳವಾರರ ಮನೆಯಲ್ಲಿ ಬುಟ್ಟಿ ತುಂಬುವಷ್ಟು ಜೋಳದ ಕಡುಬು ಮಾಡಿ ಜೋಕುಮಾರನ ಮೈ ಮೇಲಿನ ವಸ್ತುಗಳನ್ನು ತೆಗೆದು ಆತನ ಕುತ್ತಿಗೆ ಮುಚ್ಚುವವರೆಗೆ ಕಡುಬುಗಳನ್ನು ಪೇರಿಸಿ ಇಡಲಾಗುತ್ತದೆ.ಒಂದು ಕೈಯ್ಯಲ್ಲಿ ಕೊಬ್ಬರಿ ಬಟ್ಟಲನ್ನು, ಇನ್ನೊಂದು ಕೈಯ್ಯಲ್ಲಿ ದೀಪ ಹಚ್ಚಿದ ಪರಟೆಯನ್ನು ಕೊಟ್ಟಿರುತ್ತಾರೆ. ಆ ನಂತರದಲ್ಲಿ ಗಂಡಸೊಬ್ಬನು ಜೋಕುಮಾರನನ್ನು ಕುಳ್ಳಿರಿಸಿದ ಬುಟ್ಟಿಯನ್ನು ಹೊತ್ತು ನಡೆಯುತ್ತಾನೆ. ಹೀಗೆ ಕತ್ತಲಲ್ಲಿ ಸಾಗಿದ ಜೋಕುಮಾರನನ್ನಾಗಲೀ, ಆತನ ಕೈಯ್ಯಲ್ಲಿಯ ದೀಪವನ್ನಾಗಲೀ ಯಾರೂ ನೋಡುವಂತಿಲ್ಲ. ನೋಡಿದರೆ ಅಪಶಕುನವಷ್ಟೇ ಅಲ್ಲ, ವರ್ಷ ತುಂಬುವದರೊಳಗಾಗಿ ನೋಡಿದಾತ ಲೈಂಗಿಕ ಹಗರಣದಲ್ಲಿ ಸಿಲುಕಿ ಅಪಮಾನವಾಗಿ ಇಲ್ಲವೇ ಪ್ರಾಣ ಕಳೆದುಕೊಳ್ಳುವ ಅಪಾಯವೂ ಉಂಟೆಂದು ಹೇಳಲಾಗುತ್ತದೆ ‘ಜನಪದ’ದಲ್ಲಿ. ಜೋಕುಮಾರನ ಹತ್ಯೆಯಾಗುವ ದಿನ ಆತ ಹಾಯ್ದು ಹೋಗುವ ದಾರಿಯುದ್ದಕ್ಕೂ ಮೊದಲೇ ಒಬ್ಬಾತ ‘ಜೋಕುಮಾರ ಬರ್ತಾನ, ಲಗೂ ಬಾಗ್ಲಾ ಮುಚ್ಚ್ರೀ’ ಎಂದು ಹೇಳುತ್ತಾ ಹೋಗುತ್ತಾನೆ. ಮಧ್ಯರಾತ್ರಿಯ ನಂತರವೇ ಜೋಕುಮಾರನನ್ನು ಹೊತ್ತು ಕೇರಿಗೆ ಕರೆತರುತ್ತಾರೆ. ಕೇರಿಯ ಚಾವಡಿಯಲ್ಲೊಬ್ಬ ಬೆನ್ನು ಹಿಂದಕ್ಕೆ ಮಾಡಿಯೇ ಜೋಕುಮಾರನ ಬುಟ್ಟಿಯನ್ನು ತೆಗೆದುಕೊಳ್ಳುತ್ತಾನೆ. ಇಲ್ಲಿಯೂ ಬುಟ್ಟಿ ಕೊಡುವವ, ತೆಗೆದುಕೊಳ್ಳುವವ ಪರಸ್ಪರ ಒಬ್ಬರ ಮುಖವನ್ನು ಇನ್ನೊಬ್ಬರು ನೋಡುವಂತಿಲ್ಲ. ನಂತರ ಬುಟ್ಟಿಯಲ್ಲಿದ್ದ ಕಡುಬುಗಳನ್ನು ತೆಗೆಯುತ್ತಾರೆ. ಅದೇ ಸಮಯದಲ್ಲಿ ಚಾವಡಿ ಕಟ್ಟೆಯ ಮೇಲೆ ಜೋಕುಮಾರನ ಬುಟ್ಟಿಯ ಸಮೀಪ ಬಾರಿ ಮುಳ್ಳಿನ ಕಂಟಿಯನ್ನಿಟ್ಟಿರುತ್ತಾರೆ. ವೇಶ್ಯೆಯರು ಚಾವಡಿಯಲ್ಲಿಟ್ಟಿರುವ ಜೋಕುಮಾರನ ಬುಟ್ಟಿಯ ಸುತ್ತಲೂ ಸುತ್ತುತ್ತಿರಬೇಕಾದರೆ ಪಕ್ಕದಲ್ಲಿರಿಸಲಾಗಿರುವ ಮುಳ್ಳಿನ ಕಂಟಿ ಅವರ ಸೀರೆಗೆ ಸಿಕ್ಕಿ ಜಗ್ಗಿದಾಗ ‘ಜೋಕುಮಾರ ನಮ್ಮನ್ನು ಹಿಡಿದುಕೊಳ್ಳಲು ಬಂದ, ನಮ್ಮ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ’ ಎಂದು ಭೂಮ್ಯಾಕಾಶ ಬಿರಿಯುವಂತೆ ಬಾಯಿ ಮಾಡತೊಡಗುತ್ತಾರೆ. ಅದನ್ನು ಕೇಳಿದವರೆಲ್ಲ ಓಡಿ ಬಂದು ಜೋಕುಮಾರನನ್ನು ಒಣಕೆಯಿಂದ ಹಿಗ್ಗಾಮುಗ್ಗಾ ಥಳಿಸಿ ಕೊಂದು ಹಾಕುತ್ತಾರೆ. ಜೋಕುಮಾರನ ಮರಣದ ನಂತರ ಅಗಸರು ಬಟ್ಟೆ ಒಗೆಯುವ ಹಳ್ಳದ ದಂಡೆಗೋ, ಕೆರೆಯ ಸಮೀಪವೋ, ನದಿ ದಂಡೆಗೋ ಒಯ್ದು ಬಿಸಾಕುತ್ತಾರೆ. ಜೋಕುಮಾರನು ಸತ್ತ ಸುದ್ದಿ ತಿಳಿದ ನಂತರವೇ ಏಳು ದಿನಗಳ ಕಾಲ ಜೋಕುಮಾರನನ್ನು ಹೊತ್ತು ತಿರುಗಿದ ಮಹಿಳೆಯರು ತಲೆಗೆ ನೀರು ಹಾಕಿಕೊಂಡು ಸ್ನಾನ ಮಾಡುತ್ತಾರೆ. ಆ ಮೇಲೆ ಮೂರು ದಿನಗಳ ಕಾಲ ಊರಿನ ಯಾವ ಮಡಿವಾಳರೂ ಬಟ್ಟೆಗಳನ್ನು ಒಗೆಯುವಂತಿಲ್ಲ. ಜೋಕುಮಾರನನ್ನು ಬಿಸಾಕಿದ ಸ್ಥಳದಲ್ಲಿ ಕಲ್ಲಿಟ್ಟು ಪೂಜಿಸಿ ಎಡೆ ತೋರಿಸಿ ‘ದಿನ’ ಮಾಡಿ ಮುಗಿಸಿ ತಮ್ಮ ಕಾಯಕ ಪ್ರಾರಂಭಿಸುತ್ತಾರೆ..! ಇದು ಜೋಕುರಸ್ವಾಮಿಯ ಜಾನಪದ ಕತೆ… ನಿಜಕ್ಕೂ ಜೊಕುಮಾರಸ್ವಾಮಿ ರೈತರ ದೇವರು. ಏಕೆಂದರೆ ರೈತರ ಪೀಕು-ಪೈರಿನ ಹುಲುಸುವಿಕೆ ಬಯಸುವ ದೇವರು ಜೋಕುಮಾರಸ್ವಾಮಿ. ಮಳೆಗಾಗಿ ಶಿವ-ಪಾರ್ವತಿಯರನ್ನು ಅಂಗಲಾಚಿ ಮಳೆ ತರಿಸುವ ದೇವರು.ಜೊಕುಮಾರಸ್ವಾಮಿಗಿಂತಲೂ ಮೊದಲು ಬಂದು ಹೋಗುವ ದೇವರು ಗಣೇಶ ಉಂಡಿ-ಕಡಬು ತಿಂದು ಸಂಪಲೇಪರಾಕೆನ್ನುತ್ತಾ ರೈತರ ಕಷ್ಟ-ಕಾರ್ಪಣ್ಯದತ್ತ ಗಮನ ಕೊಡದ ದೇವರು..! ಹೀಗಾಗಿಯೇ ಜೊಕಪ್ಪ ಅಥವಾ ಜೋಕುಮಾರಸ್ವಾಮಿ ರೈತರಿಗೆ ಆಪದ್ಭಾಂವ ಅನ್ನಲೇನೂ ಅಡ್ಡಿಯಿಲ್ಲ… *********************** ಕೆ.ಶಿವು.ಲಕ್ಕಣ್ಣವರ

ಇತರೆ Read Post »

ನಿಮ್ಮೊಂದಿಗೆ

ಪ್ರಸ್ತುತ

ಹರಪ್ಪ – ಡಿಎನ್ಎ ನುಡಿದ ಸತ್ಯ ನೂತನ ದೋಶೆಟ್ಟಿ ಈ ಶೀರ್ಷಿಕೆಯ ಕೃತಿಯನ್ನು ಲಕ್ಷ್ಮೀಪತಿ ಕೋಲಾರ ಹಾಗೂ ಸುರೇಶ್ ಭಟ್ ಬಾಕ್ರಬೈಲು  ಅವರು ಜೊತೆಯಾಗಿ ಹೊರತಂದಿದ್ದಾರೆ. ಸಾಗರ ತಾಲೂಕು ಕುಗ್ವೆಯ ಓದು ಪ್ರಕಾಶನ  2018ರಲ್ಲಿ  ಇದರ ದ್ವಿತೀಯ ಆವೃತ್ತಿ ಮಾಡಿದೆ.ಮೊದಲ ಮುದ್ರಣದ ಎಲ್ಲ ಪ್ರತಿಗಳು ಎರಡೇ ದಿನಗಳಲ್ಲಿ  ಖಾಲಿಯಾಗಿದ್ದು ಈ ಕೃತಿಯ ಮಹತ್ವವನ್ನು ಹೇಳುತ್ತದೆ. 76 ಪುಟಗಳ ಈ ಕೃತಿಯಲ್ಲಿ  ಇರುವ ಎರಡು ಲೇಖನಗಳಲ್ಲಿ  ಅತ್ಯಂತ ಕುತೂಹಲಕಾರಿ ಸಂಶೋಧನೆಗಳ ಮಾಹಿತಿ ಇದೆ. ವಂಶವಾಹಿಗಳ ಕುರಿತ ಜ್ಞಾನವನ್ನು ಮನುಕುಲದ ಇತಿಹಾಸ ಸಂಶೋಧನೆಗೆ ಬಳಸುವ ಪ್ರಕ್ರಿಯೆ ಎರಡು ದಶಕಗಳಿಂದ ಈಚೆಗೆ ಶುರುವಾದದ್ದು. ಓದು ಬಳಗ ತನ್ನ ಮುನ್ನುಡಿಯಲ್ಲಿ ಹೇಳಿದಂತೆ,                “2001ರಲ್ಲಿ ವಿಜ್ಞಾನಿಗಳು ಮಾನವ ಜಿನೋಂ ಯೋಜನೆಯ ಮೂಲಕ ಅಧ್ಯಯನ ನಡೆಸಲು ತೊಡಗಿ ನಂತರದ ಎರಡು ದಶಕಗಳಲ್ಲಿ ಅಗಾಧ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಕಳೆದ 7-8 ವರ್ಷಗಳಲ್ಲಿ  ಪ್ರಪಂಚದ ಬಹುತೇಕ ಎಲ್ಲಾ ಜನಾಂಗೀಯ ಹಾಗೂ ಪ್ರಾದೇಶಿಕ ಭಿನ್ನತೆಗಳ ಜನರ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಿ ಅಧ್ಯಯನಕ್ಕೆ  ಒಳಪಡಿಸಿದ್ದಾರೆ. ಸದ್ಯದ ಮಟ್ಟಿಗೆ ಇಡೀ ಜಗತ್ತಿನಲ್ಲಿ ಮನುಷ್ಯನ ಚರಿತ್ರೆಯಲ್ಲಿ ನಡೆದಿರುವ ಎಲ್ಲಾ ವಲಸೆಗಳ ಇತಿಹಾಸವನ್ನು, ವಲಸೆಗಳ ಸ್ವರೂಪಗಳನ್ನು, ಜನಾಂಗೀಯ ಸಂಬಂಧಗಳನ್ನು ಸ್ಪಷ್ಟ ರೂಪದಲ್ಲಿ ಮುಂದಿಡಲು ಡಿಎನ್ಎ ಯಶಸ್ವಿಯಾಗಿದೆ ಎನ್ನಬಹುದು.” ನಾನು ಯಾರು? – ಈ ಪ್ರಶ್ನೆ ಅಧ್ಯಾತ್ಮಿಕವಾಗಿಯೂ, ಸಾಮಾಜಿಕವಾಗಿಯೂ ಸತತವಾಗಿ ಕಾಡುವಂಥದ್ದು. ಇದುವರೆಗೂ ಮನುಷ್ಯನಿಗೆ ತನ್ನ ಚರಿತ್ರೆಯ ಕುರಿತು ಇರುವ ನಂಬಿಕೆಯನ್ನು, ಅಹಂ ಅನ್ನು ಈ ಸಂಶೋಧನೆ ಬುಡಮೇಲು ಮಾಡಬಲ್ಲದು. ಜೊತೆಗೆ ವೈಜ್ಞಾನಿಕ ಆಧಾರವನ್ನೂ ಅದು ಒದಗಿಸುವುದರಿಂದ ಮಾಹಿತಿಗೆ ಅಧಿಕೃತತೆಯೂ ಬರುವುದು. ಮನುಷ್ಯನ ಚರಿತ್ರೆಯ ಸತ್ಯದ ಬಗ್ಗೆ ಕರಾರುವಾಕ್ಕಾದ ತಿಳಿವನ್ನೂ ಸಹ ಅದು ನೀಡಬಲ್ಲದು.  ಹರಪ್ಪ, ಮೊಹೆಂಜೊದಾರೊ, ಧೊಲವೀರ, ಇತ್ತೀಚೆಗೆ ಹರಿಯಾಣಾದ ರಾಖಿಗರಿಯ ಉತ್ಖನನದಲ್ಲಿ ದೊರೆತ ಮನುಷ್ಯರ ಪಳೆಯುಳಿಕೆಗಳ ಡಿಎನ್ಎ ಸಂಶೋಧನೆ ನಮ್ಮ ದೇಶದ ಚರಿತ್ರೆಯ ಕುರಿತೂ ಹೊಸ ಹೊಳಹುಗಳನ್ನು ನೀಡಬಲ್ಲದು.  ಕೃತಿಯ ಮೊದಲ ಲೇಖನ — ರಾಖಿಗರಿ ಪಳೆಯುಳಿಕೆಯ ಡಿಎನ್ಎ ನುಡಿದ ಸತ್ಯವೇನು? ಈ ಶೀರ್ಷಿಕೆಯಲ್ಲೇ ಕುತೂಹಲವಿದೆ. ಹರಪ್ಪ-ಮೊಹೆಂಜೊದಾರೋ ಉತ್ಖನನದಲ್ಲಿ ದೊರೆತ ಪಳೆಯುಳಿಕೆಗಳು ಭಾರತ ಉಪಖಂಡದ ಪ್ರಾಚೀನ ನಾಗರಿಕತೆಗೆ ತಳುಕು ಹಾಕಿಕೊಂಡಿದ್ದು ತಿಳಿದಿದೆ. ಆದರೆ ಇಲ್ಲಿಯ ನಿವಾಸಿಗಳ ಕುರಿತು ಎದ್ದ ಅನೇಕ ಪ್ರಶ್ನೆಗಳಿಗೆ ಉತ್ತರ ಸಿಕ್ಕಿರಲಿಲ್ಲ. ಇದೀಗ ರಾಖಿಗರಿಯಲ್ಲಿ ಸಿಕ್ಕಿರುವ 4500ವರ್ಷಗಳ ಹಿಂದಿನ ಅಸ್ಥಿಪಂಜರ ಈ ಜನ ಯಾರು ಎಂಬುದಕ್ಕೆ ಸ್ಪಷ್ಟ ಉತ್ತರ ನೀಡಬಲ್ಲುದಾಗಿದೆ.  ಈ ಸಂಶೋಧನೆಗಳಲ್ಲಿ ಸಿಂಧೂ ನಾಗರಿಕತೆಯ ಜನ ವಿಕಾಸಗೊಂಡಿರುವುದು ಇರಾನಿನ ಬೇಸಾಯಗಾರರು ಮತ್ತು ಪ್ರಾಚೀನ ಆದಿಯ ದಕ್ಷಿಣ ಭಾರತೀಯರ ಕೂಡುವಿಕೆಯಿಂದ , ಆದಿಯ ಉತ್ತರ ಭಾರತೀಯ ಜನವರ್ಗದ ವಿಕಾಸ, ಆದಿಯ ಉತ್ತರ ಭಾರತೀಯ ಹಾಗೂ ಆದಿಯ ದಕ್ಷಿಣ ಭಾರತೀಯರ ಸಮ್ಮಿಶ್ರಣದ ಫಲವಾಗಿ ಬಹುತೇಕ ಜನವರ್ಗಗಳ ವಿಕಸನ ಮೊದಲಾದ ಅತ್ಯಂತ ರೋಚಕ ವಿಷಯಗಳನ್ನು ಹೇಳುತ್ತ ಇದುವರೆಗೆ ಪ್ರಚಲಿತದಲ್ಲಿದ್ದ ಆರ್ಯ ಸಂಸ್ಕೃತಿಯ ಮೂಲ  ಭಾರತ ಎಂಬ ವಾದವನ್ನೂ ಅಲ್ಲಗಳೆಯುತ್ತದೆ. ರಾಖಿಗರಿ ಸಂಶೋಧನೆ, ಹರಪ್ಪ/ಸಿಂಧೂ ನಾಗರಿಕತೆಯ ಜನರು ಮತ್ತು ಇಂದು ಪಶ್ಚಿಮ ಘಟ್ಟಗಳ ದಕ್ಷಿಣ ತಮಿಳು ನಾಡಿನ ನೀಲಗಿರಿ ಅರಣ್ಯ ಬೆಟ್ಟದಲ್ಲಿ ನೆಲೆಸಿರುವ ಆದಿವಾಸಿ ಇರುಳರು ಮೂಲತಃ ಒಂದೇ ವಂಶದವರು ಎಂದು ಹೇಳುತ್ತದೆ. ಆಧುನಿಕ ಭಾರತೀಯ ಒಂದು ಮಿಶ್ರಣ ತಳಿಯಾಗಿದ್ದು ಅದರಲ್ಲಿ ಗಮನಾರ್ಹ ಪ್ರಮಾಣದಲ್ಲಿ ಇರುವುದು ಹರಪ್ಪ ನಾಗರಿಕತೆಯ ಜನರು ಅಂದರೆ ಆದಿಯ ದಕ್ಷಿಣ ಭಾರತೀಯರ ವಂಶವಾಹಿಗಳು. ಇನ್ನು ವಲಸೆ ಬಗ್ಗೆ ಇವರು ಹೇಳಿರುವುದು-ಆಧುನಿಕ ಲಕ್ಷಣಗಳಿರುವ ಮಾನವರು  ಸುಮಾರು 70000 ವರ್ಷಗಳ ಹಿಂದೆ ಆಫ್ರಿಕಾದಿಂದ ವಲಸೆ ಹೊರಟು ವಿಶ್ವದ ಬೇರೆ ಬೇರೆ ಭಾಗಗಳಿಗೆ ಚದುರಿ ಹೋದರು.ಅವರಲ್ಲಿ ಒಂದು ಗುಂಪು ಸುಮಾರು 50000 ವರ್ಷಗಳ ಹಿಂದೆ ಭಾರತಕ್ಕೆ ಬಂದಿಳಿದಿದೆ.  ಡಿಎನ್ಎ ಅಧ್ಯಯನಗಳೂ ಇದನ್ನು ದೃಢಪಡಿಸಿವೆ.ಮತ್ತೊಂದು ದೊಡ್ಡ ವಲಸೆ 10000 ವರ್ಷಗಳ ಹಿಂದೆ ಪಶ್ಚಿಮ ಏಷಿಯಾದಿಂದ ಕೆಲವು ಗುಂಪು ಯುರೋಪ್ ಕಡೆಗೂ ಕೆಲವು ಇರಾನ್ ಮೂಲಕ ಭಾರತ ಹಾಗೂ ಇತರ ಭಾಗಗಳಲ್ಲೂ ನೆಲೆಸಿದವು. ಇಂಥ ಹಲವಾರು ಆಸಕ್ತಿದಾಯಕ ವಿಷಯಗಳು ಇಲ್ಲಿವೆ.  ಕೆಲವು ನಿಂದನೆಗಳಿವೆ. ಇಂಥ ಪ್ರಯತ್ನಗಳು ಕೂಡ ಇತಿಹಾಸದಲ್ಲಿ ತಮ್ಮ ಮೇಲ್ಲ್ಮೆಯನ್ನು ಸ್ಥಾಪಿಸಿಕೊಳ್ಳುವ ಭಾಗವೇ ಆಗಿರುವುದರಿಂದ ಅವುಗಳನ್ನು ಬಿಟ್ಟು ಮನುಕುಲದ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಸಂಶೋಧನೆಗಳ ಬಗ್ಗೆ ಕೇಂದ್ರೀಕರಿಸಿ ಓದುವುದು ಒಳ್ಳೆಯದು. ಎರಡನೇಯ ಲೇಖನ ಲಕ್ಷ್ಮೀಪತಿಯವರದು. ಶೀರ್ಷಿಕೆ–ಸಂಸ್ಕ್ರತಿ  ಇತಿಹಾಸದ ಮಹಾಮರೆವು      ( ರಾಖಿಗರಿ ಡಿಎನ್ಎ ಫಲಿತಾಂಶದ ಜಾಡಿನಲ್ಲಿ).  ಕೆಲ ವರ್ಷಗಳ ಹಿಂದೆ ಇಂಥ ಒಂದು ಮಾಹಿತಿ ಸಂಗ್ರಹಣೆಯನ್ನು ಕಳೆದ 20 ವರ್ಷಗಳಿಂದ  ಮಾಡುತ್ತಿದ್ದೇನೆ ಎಂದು ಅವರು ನನಗೆ ಹೇಳಿದ್ದರು. ಅದರ ಬಗ್ಗೆ 3 ಚಿಂತನಗಳನ್ನು ಅವರ ಹತ್ತಿರ ಬೆಂಗಳೂರು ಆಕಾಶವಾಣಿಗೆ ಆಗ ಮಾಡಿಸಿದ್ದೆ.  8 ವರ್ಷಗಳ ಹಿಂದೆ ನಾನು ಧೊಲವಿರಾಕ್ಕೆ ಹೋದಾಗ ಅಲ್ಲಿಯ ಗೈಡುಗಳು ಬಹಳ ಅಲವತ್ತುಕೊಂಡು ಒಂದು ಮಾತು ಹೇಳಿದ್ದರು. ಒಬ್ಬ ಇತಿಹಾಸಜ್ಞ ಆ ಸ್ಥಳದ ಬಗ್ಗೆ ಸಾಕಷ್ಟು ಹೊಸ ಮಾಹಿತಿ ಸಂಗ್ರಹಿಸಿದ್ದಾರೆ. ಆದರೆ ಸರ್ಕಾರಕ್ಕೆ ಅದನ್ನು  ಸಲ್ಲಿಸುತ್ತಿಲ್ಲ ಎಂದು. ಆಗ ನನಗೇಕೊ ಅನುಮಾನವಾಗಿತ್ತು. ಈಗ ರಾಖಿಗರಿಯ ಸಂಶೋಧನೆಗಳು ಬಂದ ಮೇಲೆ ಅದಕ್ಕೆ ತಾಳೆಯಾಗುತ್ತಿದೆ. ಇಂದು ಭಾರತವೊಂದೇ ಅಲ್ಲ. ಇಡೀ ಜಗತ್ತೇ ಕಕೇಷಿಯನ್ ಜನಾಂಗವಾದಿಗಳ ವಸಾಹತಾಗಿ ಮಾರ್ಪಟ್ಟಿದೆ ಎಂಬ ಅಚ್ಚರಿ ಹುಟ್ಟಿಸುವ ಮಾಹಿತಿಯೊಂದಿಗೆ ಲೇಖನ ಆರಂಭವಾಗುತ್ತದೆ. ಯುರೇಷಿಯಾದ ದಕ್ಷಿಣಕ್ಕಿರುವ ಕಾಕಸಸ್ ಪರ್ವತಾವಳಿಗಳಲ್ಲಿ ವಾಸಿಸುತ್ತಿದ್ದ ಜನರು ಕಕೇಷಿಯನ್ನರು. ಇದರ ಬಗ್ಗೆ ಆಗಿರುವ ನಿಖರ ಸಂಶೋಧನೆಗಳ ಮಾಹಿತಿಯನ್ನು ಇಲ್ಲಿ ಅವರು ಕೊಡುತ್ತಾರೆ. ಮಾನವ ಕುಲದ ಪೂರ್ವಿಕ ಪಿತೃವಿನ ಬಗೆಗಿನ ಜಿಜ್ಞಾಸೆ ಹೊಸ ಹೊಸ ಸಿದ್ಧಾಂತಗಳನ್ನು ರೂಪಿಸಿದೆ. ಆಫ್ರಿಕಾದ ಮೂಲವನ್ನು ಒಪ್ಪಿಕೊಳ್ಳಲಾಗದೆ ಪ್ರತಿಷ್ಠಿತ ಯುರೋಪ್ ತನ್ನದೇ ಸಿದ್ಧಾಂತಗಳನ್ನು ರೂಪಿಸಿಕೊಂಡಿದೆ. ‘ಆರ್ಯ ‘ ಮೂಲದ ಬಗೆಗಿನ ಚರ್ಚೆಗಳನ್ನು ಇಲ್ಲಿ ನೆನಪಿಸಿಕೊಳ್ಳುತ್ತ ಹಿಟ್ಲರ್ ಕೂಡ ‘ತಾನು ಆರ್ಯ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ ‘ಎಂಬ ಮಾತೂ ಇಲ್ಲಿ ಸ್ಮರಣೀಯ. ಬಹುತೇಕ ಅನುವಂಶಿಕ ವಿಜ್ಞಾನಿಗಳು ತಾಯಿಯಿಂದ ಮಕ್ಕಳಿಗೆ ಹರಿದು ಬರುವ X ವರ್ಣತಂತುವಿನ ಮೂಲಕ ವಿಶ್ಲೇಷಣೆಗಳನ್ನು ನಡೆಸಿ ಮಾನವನ ಪೂರ್ವಿಕ ಪಿತೃಗಳನ್ನು ಪತ್ತೆ ಹಚ್ಚಲು ಪ್ರಯತ್ನಿಸಿ ವಿಫಲರಾಗಿದ್ದರು.ಆದರೆ ಲಂಡನ್ ಮೂಲದ ವಂಶವಾಹಿ ವಿಜ್ಞಾನಿ ಡಾ. ಸ್ಪೆನ್ಸರ್ ವೆಲ್ಸ್ ತಂದೆಯಿಂದ ಗಂಡು ಮಕ್ಕಳಿಗೆ ಮಾತ್ರವೇ ಹರಿದು ಬರುವ Y ವರ್ಣತಂತುವಿನ ಡಿಎನ್ಎ ವಿಶ್ಲೇಷಣೆಯನ್ನು ನಡೆಸಿದರು. ಒಟ್ಟು22 ಭಿನ್ನ ಭೌಗೋಳಿಕ ಪ್ರದೇಶಗಳ 1062 ಪುರುಷರ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಿ 8 ದೇಶಗಳ ವಿಜ್ಞಾನಿಗಳ ತಂಡದೊಂದಿಗೆ ನಡೆಸಿದ ಅಧ್ಯಯನದ ನಂತರ ಅವರು ನೀಡಿದ ವಿವರ ಅತ್ಯಂತ ಕುತೂಹಲಕಾರಿಯಾದದ್ದು. ನಮೀಬಿಯಾದ ಸ್ಯಾನ್ ಬುಷ್ ಬುಡಕಟ್ಟಿನ Y ವರ್ಣತಂತುವಿನಲ್ಲಿ ದೊರೆತ ಗುರುತು 6000೦ ವರ್ಷಗಳಿಗೂ ಹಿಂದಿನದ್ದು. ಇದೇ ಗುರುತು ಭಾರತದ ಸೌರಾಷ್ಟ್ರ, ಮಧುರೈ, ಮಲೇಷಿಯಾ, ನ್ಯೂಗಿನಿ ಹಾಗೂ ಆಸ್ಟ್ರೇಲಿಯಾ ಮೂಲದ ನಿವಾಸಿಗಳಲ್ಲೂ ಕಂಡು ಬಂದಿದ್ದರಿಂದ ಆಧುನಿಕ ಮಾನವನ ಪೂರ್ವಿಕರ ಮೊದಲ ವಲಸೆಯ ಮಾರ್ಗ ಆಫ್ರಿಕಾದಿಂದ ಭಾರತದ ಕರಾವಳಿ ಮಾರ್ಗವನ್ನೊಳಗೊಂಡಂತೆ ಇಂಡೋನೆಷಿಯಾ, ಮಲೇಷಿಯಾ, ಆಸ್ಟ್ರೇಲಿಯಾದ ವರೆಗೂ ಗುರುತಿಸಲಾಯಿತು. ಈ ಪ್ರಯಾಣದ  ಅವಧಿ 300೦ ವರ್ಷಗಳು ಎಂದು ಅವರು ಅಂದಾಜಿಸುತ್ತಾರೆ. ಎರಡನೆಯ ವಲಸೆಯಲ್ಲಿ 4500೦ ವರ್ಷಗಳ ಹಿಂದೆ ಆಫ್ರಿಕಾದಿಂದ ಹೊರಟ ತಂಡ ಮಧ್ಯಪ್ರಾಚ್ಯ, ಮಧ್ಯ ಏಷ್ಯಾ, ಚೀನಾ, ಯುರೋಪ್ ಹಾಗೂ ದಕ್ಷಿಣ ಏಷ್ಯಾಗಳಲ್ಲಿ ಸಂತತಿ ಹಬ್ಬಿಸಿತು. ಹೀಗೆ ಮೆಡಿಟರೇನಿಯನ್ ಭಾಗದಿಂದ ಭಾರತದ ವಾಯುವ್ಯವನ್ನು ತಲುಪಿದವರೇ ಭಾರತದ ಇಂದಿನ ದ್ರಾವಿಡ ಭಾಷಿಕರು. ಹಾಗೆ ಯುರೇಷಿಯಾದಲ್ಲಿ ನೆಲೆಸಿದವರೇ ಕಕೇಷಿಯನ್ನರು!  ವೆಲ್ಸ್  ನಿಷ್ಕರ್ಷಿಸಿದ ಸಮಯಕ್ಕಿಂತ ಹಿಂದೆಯೇ ಮಾನವ ವಂಶಾವಳಿಗಳು ಚೀನಾ ಹಾಗೂ ಯುರೋಪಿನಲ್ಲಿ ಇದ್ದವು. ಆದರೆ ನೈಸರ್ಗಿಕ ವಿಕೋಪಕ್ಕೆ, ಇನ್ನಿತರ ಕಾರಣಗಳಿಗೆ  ತುತ್ತಾಗಿ  ಅವರೆಲ್ಲ  ನಾಮಾವಶೇಷವಾಗಿರಬೇಕು.  ವೆಲ್ಸ್ ಅವರ ಪ್ರಕಾರ ಇವತ್ತು ಭೂಮಿಯ ಮೇಲಿರುವ ಸಂತತಿಯಲ್ಲಿ ಇನ್ನೂರು ಜನರಲ್ಲಿ ಒಬ್ಬ ನಿಸ್ಸಂಶಯವಾಗಿ ಚೆಂಗೀಸ್ ಖಾನ್ ವಂಶದವನು! ಇಂಥ ಅನೇಕ ಕೌತುಕದ ವಿಷಯಗಳು ಈ ಲೇಖನದಲ್ಲಿವೆ. ಲಕ್ಷ್ಮೀಪತಿಯವರು ರಾಖಿಗರಿಯ ಬಗ್ಗೆ, ಅಲ್ಲಿಯ ಸಂಶೋಧನೆಗಳ ಬಗ್ಗೆ ವಿಸ್ತ್ರತ ಮಾಹಿತಿ ನೀಡುತ್ತಾರೆ.  ಇಡೀ ಜಗತ್ತಿನ ಇಂದಿನ ಜನಸಮುದಾಯಗಳು ವಲಸೆ, ಪಲ್ಲಟಗಳ ಕಾರಣದಿಂದ ಹಲವಾರು ಧಾರೆಗಳ ಮಿಶ್ರಣ ಹೊಂದಿರುವುದರ ಬಗ್ಗೆಯೂ ಅಧ್ಯಯನಗಳು ದೃಢಪಡಿಸಿವೆ. ವೈಜ್ಞಾನಿಕ ತಿಳಿವಿನ ಆಧಾರದ ಮೇಲೆ ಆದಿಪೂರ್ವಿಕ ದಕ್ಷಿಣ ಭಾರತೀಯರು, ಪೂರ್ವಿಕ ದಕ್ಷಿಣ ಭಾರತೀಯರು, ಪೂರ್ವಿಕ ಉತ್ತರ ಭಾರತೀಯರು ಎಂಬ ವಿಂಗಡಣನೆಯನ್ನು ವಿದ್ವಾಂಸರು ಗುರುತಿಸಿಟ್ಟಿದ್ದಾರೆ. ಲೈಂಗಿಕ ಪಕ್ಷಪಾತದಿಂದ ಆದ ಉತ್ಪರಿವರ್ತನೆಗಳನ್ನೂ ಗುರುತಿಸಿದ್ದಾರೆ.  ಲಕ್ಷ್ಮೀಪತಿಯವರು ವೇದಕಾಲವನ್ನೂ ತರ್ಕಿಸಿದ್ದಾರೆ. ಯುರೇಷಿಯಾದ ಯುದ್ಧೋನ್ಮಾದಿಗಳು ಭಾರತಕ್ಕೆ ಬಂದು ಇಲ್ಲಿನ ಉಪ್ಪನ್ನೇ ಉಂಡು …ಛೇ! ಈ ನೆಲದ ಇತಿಹಾಸ ಏಕೆ ವಕ್ರಗತಿ  ಹಿಡಿಯಿತೋ ಎಂದು ಬೇಸರಿಸಿದ್ದಾರೆ. ಕಾಲಕಾಲಕ್ಕೆ ಜರುಗಿದ ಸಾಂಸ್ಕ್ರತಿಕ ರಾಜಕಾರಣದ ಬಗ್ಗೆಯೂ ದೀರ್ಘವಾಗಿ ಹೇಳಿದ್ದಾರೆ. ನಾನು ಕಾಕತಾಳೀಯವೆಂಬಂತೆ  ಈ ಪುಸ್ತಕ, ರವಿ ಹಂಜ್ ಅವರ ಹ್ಯೂಎನ್ ತ್ಸಾಂಗನ ಮಹಾಪಯಣ, ನೇಮಿಚಂದ್ರರ ಯಾದ್ ವಶೇಮ್ ಇವುಗಳನ್ನು ಒಂದರ ಹಿಂದೆ ಒಂದು ಓದಿದೆ. ಮೂರರಲ್ಲೂ ಅದೆಷ್ಟು ಒಂದೇ ಬಗೆಯ ಹೊಳಹುಗಳು ಕಂಡವು ನನಗೆ. ವಸುಧೈವ ಕುಟುಂಬಕಂ- ಎಂಬ ಮಾತಿದೆಯಲ್ಲ. ಇಂಥ ಸಂಶೋಧನೆಗಳು ಹೆಚ್ಚು ನಡೆದು, ಜಗವೆಲ್ಲ ಒಂದೇ ಎಂಬ ಸಿದ್ಧಾಂತ ನಮ್ಮ ಕಾಲದಲ್ಲಿ ಸಿದ್ಧವಾಗದಿದ್ದರೂ ಆ ದಿಸೆಯ ಆಲೋಚನೆ ಆರಂಭವಾಗಿ ಜಗತ್ತಿನಲ್ಲಿ ಜಾತಿ, ಮಾತು, ಪಂಥ, ಧರ್ಮಗಳ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರ, ಯುದ್ಧಗಳು ಕಡಿಮೆಯಾಗಲಿ. ಲಕ್ಷ್ಮೀಪತಿಯಾವರ  ಸತತ ಅಧ್ಯಯನ, ಸುವಿಸ್ತಾರ ಓದಿಗೆ ಶರಣು. ಇತಿಹಾಸ ಎಂದರೆ ಮೂಗು ಮುರಿಯುವವರು ತಿಳಿಯಲೇಬೇಕಾದ ಸತ್ಯವೆಂದರೆ ಅದನ್ನು ಓದದಿದ್ದರೆ ‘ ನಾನು ಯಾರು?’ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳದೇ ಈ ಜಗತ್ತು ಒಂದು ದಿನ ಕೊನೆಯಾಗುತ್ತದೆ ಎಂಬುದು. ಈ ಹಿನ್ನೆಲೆಯಲ್ಲಿ  ಎಲ್ಲರೂ ಓದಲೇಬೇಕಾದ ಪುಸ್ತಕ ಇದು. ( ಪ್ರಕಾಶಕರು- Harshakumar KSKugwe Post, Sagar Taluk, Shimoga District- 577401Rs 50.ಪುಸ್ತಕಗಳಿಗಾಗಿ – 7353712715, 9844252648)***** ****************************************

ಪ್ರಸ್ತುತ Read Post »

ಕಾವ್ಯಯಾನ

ಚೇತನಾ ಕುಂಬ್ಳೆ ಕಾವ್ಯಗುಚ್ಚ

ಚೇತನಾ ಕುಂಬ್ಳೆ ಕಾವ್ಯಗುಚ್ಚ ನಿರೀಕ್ಷೆ ನಿನ್ನ ಕೈಹಿಡಿದು ನಡೆದ ದಾರಿಯಲ್ಲಿಹೆಜ್ಜೆಗುರುತುಗಳು ಇನ್ನೂ ಮಾಸಿಲ್ಲನಿನ್ನ ಹೆಸರ ನೆಪದಲ್ಲಿ ಅಂಗೈಯಲ್ಲಿ ಹಚ್ಚಿದಮದರಂಗಿಯ ಬಣ್ಣ ಇನ್ನೂ ಅಳಿಸಿಲ್ಲ ಸಮಯವನ್ನು ದೂಷಿಸುತ್ತಾದಿನ ರಾತ್ರಿಯೆನ್ನದೆಕಾದಿದ್ದೆ ಕಾತರಿಸಿದ್ದೆಬಯಸಿದ್ದೆ ನಿನ್ನ ಸೇರಲು ಕಣ್ಗಳಿಂದುದುರಿದ ಹನಿಗಳುಮಣ್ಣಿನಲ್ಲಿ ನರಳುತ್ತಿದೆತನು ಮನ ತಣ್ಣಗಾಗಿದೆನಿನ್ನ ಬಿಸಿಯುಸಿರ ಬಿಸುಪಿಲ್ಲದೆ ಅದೆಷ್ಟು ಚುಚ್ಚು ಮಾತುಗಳನ್ನಾಲಿಸಿದ್ದೆಎಷ್ಟೊಂದು ಕೆಂಗಣ್ಣುಗಳಿಗೆ ಗುರಿಯಾಗಿದ್ದೆಎದೆ ಸೀಳುವಂತ ನೋವಿದ್ದರೂಬಲವಂತದಿ ತುಟಿಗಳಲ್ಲಿನಗುವ ತರಿಸಿದ್ದು ನಿನಗಾಗಿಯೇ ಜೊತೆಗಿದ್ದ ಒಂದಷ್ಟು ಕ್ಷಣಗಳುನೋವನ್ನು ಮರೆಸುತ್ತವೆನಿನ್ನ ನೆನೆಯುವಾಗಲೆಲ್ಲನೀನಿತ್ತ ನೆನಪುಗಳು ಸಂತೈಸುತ್ತವೆ ಈಗಲೂ ಕಣ್ಣ ನೋಟಗಳುಬಾಗಿಲಿನತ್ತ ಸರಿಯುವುದು ನಿಲ್ಲಲಿಲ್ಲನಿನ್ನಲ್ಲಿಟ್ಟ ನಂಬಿಕೆಗಳುಇನ್ನೂ ಸುಳ್ಳಾಗಲಿಲ್ಲ ಕಾರಣ ನೀನು ಎದೆಯಲ್ಲಿಹಚ್ಚಿದ ಪ್ರೀತಿಯ ದೀಪನಿತ್ಯವೂ ಉರಿಯುತಿದೆಅದರ ಬೆಳಕಿನಲ್ಲೆನಾನು ಉಸಿರಾಡುತ್ತಿರುವೆ ಕವಿತೆ ಬರೆಯುತ್ತೇನೆ ನೋವು ಎದೆಯನ್ನಿರಿಯುವಾಗಸಹಿಸಲಾಗದೆ ಕಣ್ಣೀರು ಹರಿಸುತ್ತೇನೆಪ್ರೀತಿಸುವ ಕೈಗಳು ಒರೆಸಲಿಯೆಂದಲ್ಲಮನಸ್ಸು ಒಂದಿಷ್ಟು ಹಗುರಾಗಲಿಯೆಂದು ಇರುಳ ನಿಶ್ಯಬ್ದತೆಯಲ್ಲಿಕನಸುಗಳನ್ನು ಹೆಣೆಯುತ್ತೇನೆಎಲ್ಲವೂ ನನಸಾಗಲಿಯೆಂದಲ್ಲವಾಸ್ತವವನ್ನು ಕ್ಷಣಹೊತ್ತು ಮರೆಯಲೆಂದು ಮುಸ್ಸಂಜೆ ಮರಳಲ್ಲಿಕುಳಿತುಕೊಳ್ಳುತ್ತೇನೆಅಲೆಗಳ ನರ್ತನವನ್ನು ನೋಡಲು ಮಾತ್ರವಲ್ಲಪ್ರಕೃತಿಯಲ್ಲಿ ಮಿಂಚಿಮರೆಯುವವಿಸ್ಮಯಗಳನ್ನು ಕಣ್ತುಂಬಿಕೊಳ್ಳಲೆಂದು ಮರೆಯಲಾಗದ ಕ್ಷಣಗಳನ್ನುನೆನಪಿನ ಜೋಳಿಗೆಯಲ್ಲಿ ತುಂಬಿಕೊಳ್ಳುತ್ತೇನೆಧೂಳು ಹಿಡಿದು ಮಾಸಲೆಂದಲ್ಲನೆನಪಾದಾಗ ನೆನೆಯಲೆಂದು ಆಗಾಗ ಮೌನಕ್ಕೆ ಶರಣಾಗುತ್ತೇನೆಮಾತು ಬೇಸರವಾಗಿಯಲ್ಲಮೌನದೊಳಗವಿತಿರುವಮಾತುಗಳನಾಲಿಸಲೆಂದು ನಾನು ಕವಿತೆ ಬರೆಯುತ್ತೇನೆಓದುಗರು ಓದಲೆಂದಲ್ಲಭಾವನೆಗಳಿಗೆ ಉಸಿರುಗಟ್ಟುವ ಮೊದಲುಅಕ್ಷರ ರೂಪಕ್ಕಿಳಿಸಿ ಜೀವ ತುಂಬಲೆಂದು ಕರೆಯದೆ ಬರುವ ಅತಿಥಿ ಕರೆಯದೆ ಬರುವ ಅತಿಥಿ ನೀನುಕರೆದರೂ ಕಿವಿ ಕೇಳಿಸದವನುಯಾರೂ ಇಷ್ಟ ಪಡದ ಅತಿಥಿ ನೀನು ಎಲ್ಲಿ, ಯಾವಾಗ, ಹೇಗೆ, ಯಾಕೆಯಾವ ನಿಮಿಷದಲ್ಲಿ ಯಾವ ರೂಪದಲ್ಲಿನೀನು ಬರುವೆಯೆಂದು ಗೊತ್ತಿಲ್ಲ ನನಗೆಮನ್ಸೂಚನೆ ನೀಡದೆ ಬರುವೆ ನೀನುಎಲ್ಲಿಂದ ಬರುವೆಯೋಎಲ್ಲಿಗೆ ಕರೆದೊಯ್ಯುವೆಯೋಒಂದೂ ತಿಳಿದಿಲ್ಲ ಒಡೆದು ನುಚ್ಚುನೂರು ಮಾಡುವೆಸಣ್ಣಪುಟ್ಟ ಸಂತೋಷಗಳನ್ನುಮನದ ತುಂಬ ವೇದನೆ ನೀಡಿಹೋಗುವೆ ನೀನು ಒಮ್ಮೆಯೂ ತಿರುಗಿ ನೋಡದೆ ಹಿರಿಯರೆಂದೋ, ಕಿರಿಯರೆಂದೋಶ್ರೀಮಂತರೆಂದೋ, ಬಡವರೆಂದೋನೋಡದೆ ಓಡಿ ಬರುವೆಎಲ್ಲರ ಬಳಿಗೆ ಕಾಲಕಾಲಕೆಕಾರಣ,ನಿನ್ನ ಕಣ್ಣಿಗೆ ಸಮಾನರಲ್ಲವೇ ಎಲ್ಲರೂ ಕಣ್ಣೀರು ಕಂಡರೂ,ಕರಗದ ಹೃದಯ ನಿನ್ನದುನೋವನ್ನು ಅರಿತರೂ,ಮಿಡಿಯದ ಮನಸ್ಸು ನಿನ್ನದುಓ ಅತಿಥಿಯೇ….ಯಾಕಿಷ್ಟು ಕ್ರೂರಿಯಾದೆ ನೀನು? ***********************************************************

ಚೇತನಾ ಕುಂಬ್ಳೆ ಕಾವ್ಯಗುಚ್ಚ Read Post »

ಕಾವ್ಯಯಾನ

ನೀನೆಂದರೆ ಆಕಾಶದಾಚೆಯ ಖುಷಿ

ನೀನೆಂದರೆ ಆಕಾಶದಾಚೆಯ ಖುಷಿ ಪ್ರೇಮಾ ಟ.ಎಂ.ಆರ್. ನೀ ಮಡಿಲಲ್ಲಿ ಮಲಗಿದ್ದೆನಿನ್ನ ಮೆತ್ತಗೆ ಸವರಿದೆ ನಾನುಆಕಾಶ ಮುಟ್ಟಿದ ಖುಶಿಯೇಉಹುಂ ಅದು ಕಡಿಮೆಯೇ ಹೋಲಿಕೆಗೆಮುಗಿಲ ಚುಕ್ಕಿನೀನು ಬೊಗಸೆಯೊಳಗಿದ್ದೆನಿನ್ನ ಕಣ್ಣೊಳಗೆ ಬರೀ ನಾನಿದ್ದೆನಿನ್ನ ಕೆಂಪು ಬೆರಳುಗಳ ಪುಟ್ಟ ಬಿಗಿಮುಷ್ಠಿಯೊಳಗೆ ನಾನು ಹುದುಗಿ ಕೂರಬೇಕೆಂದುಕೊಂಡೆ ನಿನಗೆ ಎದೆಯೂಡುತ್ತಿದ್ದೆ ನಾನುಜಗದಾವ ನೋವುಗಳೂ ನಿನ್ನಮುಟ್ಟಕೂಡದೆಂಬ ಕಕ್ಕುಲಾತಿಯಲ್ಲಿನಿನಗೆ ಹಾಲನ್ನದ ತುತ್ತು ಇಕ್ಕುತ್ತಿದ್ದೆಚಂದ್ರ ಚಂದ ನಗೆ ನಗುತ್ತಿದ್ದನಿನಗೆ ಜುಟ್ಟು ಕಟ್ಟುತ್ತಿದ್ದೆ ನಾನುಇನ್ನೊಂದು ಹಡೆವ ಬಯಕೆನನ್ನ ಕಾಡದಿರಲೆಂದುನಿನಗೆಂದೇ ಇರುವ ವಾತ್ಸಲ್ಯಹಂಚಿ ಹೋಗದಿರಲೆಂದು ಅಂದು ನೀ ಕಿತ್ತಾಡಿದ ಪಾತ್ರೆ ಸ್ಟೆಂಡ್ ಚಪ್ಪಲಿಗೂಡು ಅಪ್ಪನ ಬರೆವ ಮೇಜುಲಾಂಡ್ರಿ ಬಕೀಟು ಒಡೆದ ಕಿಟಕಿಯ ಗಾಜುಎತ್ತೊಗೆಯುತ್ತಿದ್ದ ಪುಟ್ಟ ಸೈಕಲ್ಲುಎದೆಯಲ್ಲೆಲ್ಲೋ ಹೇಗಿದ್ದವೋ ಹಾಗೇ ಇದೆ ಒಪ್ಪವಾಗದೇ..ನಿನ್ನ ಕಣ್ಣೀರು ಸಿಂಬಳ ಒರೆಸಿದ ನನ್ನ ಹಳೆಸೀರೆಗಳ ಇಂದಿಗೂಮಡಿಕೆಮಾಡಿ ದಿಂಬಿನಮೇಲೆ ಹಾಸಿಕೊಳ್ಳುತ್ತೇನೆ ಬಿಸಾಡಲಾಗದೇ… ಅಜ್ಜನ ಅಷ್ಟುದ್ದದ ಚಪ್ಪಲಯಲ್ಲಿ ನಿನ್ನಇಟ್ಟೆಇಟ್ಟಿರುವ ಪಾದ ತೂರಿಕೊಂಡುನಡೆಯುವದೆಂದರೆ ನಿನಗೆಷ್ಟು ಮೋಹವೋ ನಾನು ನೀನು ಅಪ್ಪಪುಟ್ಟ ಬಾಡಿಗೆ ಸೂರಿನೊಳಗೆಗೋಡೆ ನೆಲ ಕಿಟಕಿಗಳನ್ನೂಮುಟ್ಟಿ ತಡವಿ ಹಚ್ಚಿಕೊಳ್ಳುತ್ತಹರಟೆಕೊಚ್ಚುತ್ತ…ನೀನು ತಿಂದುಳಿಸಿದ ಅನ್ನ ದೋಸೆ ಅಮೃತವೆಂಬಂತೆ ಬಾಚಿಕೊಳ್ಳುತ್ತನಿನ್ನ ಬಾಯಿಂದ ಜಾರಿಬಿದ್ದಚೋಕಲೇಟ್ ಚೂರುಗಳನ್ನು ಗಬಕ್ಕನೆತ್ತಿಬಾಯಿಗೆಸೆದುಕೊಳ್ಳುತ್ತದೂರದರ್ಶನದ ಜಂಗಲ್ ಬುಕ್ ನೋಡಿಕುಣಿದು ಕುಪ್ಪಳಿಸುತ್ತ ವಾಶಿಂಗ್ ಪೌಡರ್ನಿರ್ಮಾ ಹಾಡು ತೊದಲುತ್ತಹೀಗಿದ್ದೆವು ನಾವುಶಹರದ ಕೃತ್ರಿಮತೆಯೇ ಸೋಂಕದೇ ಇಂದಿಲ್ಲಿ ಬಂಗಲೆಯಿದೆ…ಬದುಕ ಬೆಳಕು ನೀನಲ್ಲಿಇಲ್ಲಿ ದೇಹವಿದೆ ಜೀವ ಭಾವ ನಿನ್ನಲ್ಲಿಇಂದು ನೀನೇ ಕೊಡಿಸಿದನನ್ನ ಮೊಬೈಲ್ ಗೆ ನಿನ್ನ ವಿಡಿಯೋ ಕಾಲ್ನಗುತ್ತಿರುವೆ..ನಗಿಸುತ್ತಿರುವೆಕಣ್ಣೆದುರು ನಡೆದಾಡುತ್ತಿರುವೆ…ನಿನ್ನ ಮುಟ್ಟಲೆಂದು ಕೈ ಚಾಚುತ್ತೇನೆಕಣ್ಣು ಹನಿಯುತ್ತದೆನಿನಗೆ ಕಾಣಗೊಡದೇ ಮತ್ತೆ ಕೇಳುತ್ತೇನೆ ನನ್ನ ನಿನ್ನ ಅದೇ ಗಾಂವ್ಟಿಯಲ್ಲಿ ಯಾವಾಗ ಬತ್ತೆ ಮಗಾ?ನಿನ್ನದು ಅದೇ ಉತ್ತರ ಬರುತ್ತೇನೆಕರೋನಾ ಒಂಚೂರು ಹದಕ್ಕೆ ಬರಲಿನಾ ಅಂಟಿಸಿಕೊಂಡು ತಂದುನಿನಗೆ ಬಂದು..ಅದೆಲ್ಲ ಜಂಜಾಟ ಬೇಡಮ್ಮಾನಿನಗೂ ವಯಸ್ಸಾಯ್ತು… ಕರೋನಾದ ಕುಲಕೋಟಿಗೆ ಶತಕೋಟಿಶಾಪ ಹಾಕುತ್ತಾ ದಿನ ದೂಡುತ್ತಿದ್ದೇನೆ…ನೀ ಬರುವ ದಾರಿಗೆ ದಿಟ್ಟಿಯ ನೆಟ್ಟು ******************************

ನೀನೆಂದರೆ ಆಕಾಶದಾಚೆಯ ಖುಷಿ Read Post »

ಕಾವ್ಯಯಾನ

ಹಂಗೇಕೆ..?

ಕವಿತೆ ಹಂಗೇಕೆ..? ವೀಣಾ ಪಿ. ಹಂಗೇಕೆ..?ಇಹದ ಅಂಗೈಯಹುಣ್ಣಿಗೆಕನ್ನಡಿಯ ಹಂಗೇಕೆ..? ಮೆರುಗು ಮೌನದಮಂದಿರಕೆಮಾತಿನ ಹಂಗೇಕೆ..? ಶುದ್ಧ ಶ್ವೇತದಒನಪಿಗೆರಂಗಿನ ಹಂಗೇಕೆ..? ಗತಿಯ ಗಮ್ಯದನಡುಗೆಗೆಗತದ ಹಂಗೇಕೆ..? ಅಗ್ನಿಗೆದೆಯೊಡ್ಡಿ ಗೆದ್ದಪಾವನೆಗೆಪತಿತತೆಯ ಹಂಗೇಕೆ..? ರಾಗ-ದ್ವೇಷಗಳಳಿದವಿರಕ್ತೆಗೆಅನುರಕ್ತಿಯ ಹಂಗೇಕೆ..? ಬಂಧನವ ಕಳಚಿಟ್ಟ ದಿಟ್ಟಪರಿವ್ರಾಜೆಗೆಸಂಘದ ಹಂಗೇಕೆ..? ಬದ್ಧ ಬದುಕ ಧನ್ಯಾತ್ಮಭಾವಕ್ಕೆಸಾವಿನಾಚಿನ ಮುಕ್ತಿಯ ಹಂಗೇಕೆ..? ***********************************

ಹಂಗೇಕೆ..? Read Post »

ಅಂಕಣ ಸಂಗಾತಿ, ಕಬ್ಬಿಗರ ಅಬ್ಬಿ

ಕಬ್ಬಿಗರ ಅಬ್ಬಿ -9

ಕಬ್ಬಿಗರ ಅಬ್ಬಿ -8 ಬಂಧ ಮತ್ತು ಸ್ವಾತಂತ್ರ್ಯದ ನಡುವೆ ಹದ ಹುಡುಕುತ್ತಾ. ಶ್ರೀ ಹರಿ ಕೋಟಾದ ರಾಕೆಟ್ ಉಡ್ಡಯನ ಕೇಂದ್ರವದು. ಭಾರತೀಯ ಬಾಹ್ಯಾಕಾಶ ಸಂಸ್ಥೆಯ ವಿಜ್ಞಾನಿಗಳು ಗಣಕಯಂತ್ರದ ಪರದೆಯೇ ಕಣ್ಣಾಗಿ ಕುಳಿತಿದ್ದಾರೆ. ಮಹಿಳಾ ವಿಜ್ಞಾನಿಯ ಇಂಪಾದ ಮತ್ತು ಅಷ್ಟೇ ಸಾಂದ್ರವಾದ ದನಿಯಿಂದ ನಿಧಾನವಾಗಿ ಮತ್ತು ಖಚಿತವಾಗಿ…ಹತ್ತು..ಒಂಭತ್ತು…ಎಂಟು.. ಹೌದು. ಅದು ಕೌಂಟ್ ಡೌನ್! ಉಪಗ್ರಹದ ಭಾರ ಹೊತ್ತ ರಾಕೆಟ್ ಸಾಕಮ್ಮನ ಮಡಿಲಿಂದ ಎದೆಯುಬ್ಬಿಸಿ ಹಾರಬೇಕು.ಒಂದು….ಸೊನ್ನೆ!!.ಅದೋ ಅದೋ..ಅಧೋಮುಖದಿಂದ ಬೆಂಕಿ ಹೊಗೆ ಚಿಮ್ಮಿತು, ರಾಕೆಟ್ಟು ಜಿಗಿಯಿತು ಅನಂತಕ್ಕೆ. ವ್ಯೋಮಗಮನಕ್ಕೆ ಮೊದಲ ಜಿಗಿತ.ಸಾಕೇ?. ಸಾಲದು!. ಭೂಮಿತಾಯಿಯ ಪ್ರೇಮ ಬಂಧನದಿಂದ ದಾಟಿಹೋಗಲು ಸುಲಭವೇ. ತಾಯಿ ಅವಳು. ಮಗು ಮಡಿಲು ಬಿಟ್ಟು ಹೋಗಲು ಮನಸ್ಸು ಒಪ್ಪಲ್ಲ. ವೇಗ..ಹೆಚ್ಚಿಸಬೇಕು.. ನೇರವಾಗಿ ಹಾರಿದರೆ ವೇಗ ವೃದ್ಧಿಸಲು ಮಾತೆಯ ಕೊಂಡಿ ಕಳಚಲು ಕಷ್ಟ. ಹಾಗೇ ಪ್ರೀತಿಯಿಂದ ಓಡಿ ಒಂದರ್ಧ ಪ್ರದಕ್ಷಿಣೆ ಹಾಕಿ ಭೂಮಿತಾಯಿಯ ಒಲವಿನ ವೃತ್ತಕ್ಕೆ ಹೊರಮುಖಿಯಾಗಿ ಹಾರುತ್ತಾ, ವಿಮೋಚನಾ ವೇಗ( escape velocity) ಪಡೆದು ಹಾರಿದಾಗ..ಅದು ಕೊನೆಯ ಲಂಘನ. ಭೂತಾಯಿಯ ಆಕರ್ಷಣೆಯಿಂದ ಬಿಡುಗಡೆ!ವ್ಯೋಮದಲ್ಲಿ, ನಿರ್ವಾತ! ಹಾರಲು ತಡೆಯೇ ಇಲ್ಲ! ಅಂತಹ ಬಿಡುಗಡೆ ಅದು! ಇನ್ನೊಂದು ಉದಾಹರಣೆ ಕೊಡುವೆ!. ಆಕೆ ಗರ್ಭಿಣಿ. ಅಮ್ಮನಾಗುವ ತವಕ. ದಿನಗಳು ಕಳೆದು ಮಗು ಬೆಳೆದು..ಹೆರಿಗೆ ಆಗದಿದ್ದರೆ?. ಆಗಲೇ ಬೇಕು. ಮಗು ಗರ್ಭದ ಕೋಶದೊಳಗಿಂದ ತಾಯಿ ದೇಹದ ಬಂಧ ಬಿಡಿಸಿ, ಜನ್ಮಿಸಿದಾಗ ಮೊದಲ ಕೆಲಸ, ಹೊಕ್ಕುಳ ಬಳ್ಳಿ ತುಂಡರಿಸುವುದು. ಅದು ಮಗುವಿನ ದೇಹಕ್ಕೆ ಸ್ವತಂತ್ರವಾಗಿ ಎದೆ ಬಡಿಯಲು, ಉಸಿರಾಡಲು ಸಿಗುವ ಸ್ವಾತಂತ್ರ್ಯ. ಸಹಜ ಕ್ರಿಯೆಯಾದರೂ ಸಣ್ಣ ವಿಷಯ ಅಲ್ಲ,ಅದು. ಪಲ್ಲಣ್ಣ ಗಾಳಿಪಟ ಹಾರಿಸ್ತಿದ್ದಾರೆ. ಅದರ ದಾರ ಒಲವು. ಆದರೆ ದಾರವನ್ನು ಗಟ್ಟಿಯಾಗಿ ಹಿಡಿದರೆ ಗಾಳಿಪಟ ಹಾರಲ್ಲ! ದಾರವನ್ನು ಬಿಡಬೇಕು! ಮತ್ತೆ ಹಿಡಿಯಬೇಕು. ಗಾಳಿಪಟ ಒಂದಷ್ಟು ಹಾರಿದಾಗ ಪುನಃ ದಾರವನ್ನು ತನ್ನತ್ತ ಸೆಳೆಯಬೇಕು, ಮತ್ತೆ ಬಿಡಬೇಕು. ಹೀಗೆ ನಿರಂತರವಾಗಿ ಎಳೆದೂ ಬಿಟ್ಟೂ, ಎಳೆದೂ ಬಿಟ್ಟೂ ನೂರಾರು ಬಾರಿ ಮಾಡಿದಾಗ ಗಾಳಿಪಟ ಆಗಸದ ಎತ್ತರದಲ್ಲಿ ಪಟಪಟಿಸಿ ಏರೋಡೈನಮಿಕ್ಸ್ ನ ಪಾಠ ಮಾಡುತ್ತೆ. ಹಕ್ಕಿ ಗೂಡಲ್ಲಿ ಮರಿಗಳಿಗೆ ರೆಕ್ಕೆ ಪುಕ್ಕ ಬಲಿತು ಹಾರುವ ವರೆಗೆ ಅಮ್ಮ ಹಕ್ಕಿ , ಮರಿಕೊಕ್ಕಿನೊಳಗೆ ಕಾಳಿಕ್ಕುತ್ತೆ. ಒಂದು ದಿನ ಅಚಾನಕ್ಕಾಗಿ ಹಕ್ಕಿ ಮರಿ ರೆಕ್ಕೆ ಬೀಸುತ್ತೆ, ಆಗಸಕ್ಕೆ ಹಾರುತ್ತೆ.ಬಂಧ, ಬಂಧನ ಮತ್ತು ಸ್ವಾತಂತ್ರ್ಯ ಇವುಗಳು ಜೀವ ನಿರ್ಜೀವ ಜಗತ್ತಿನ ಚಲನತತ್ವದ ಸಮೀಕರಣಗಳ ಚರಸಂಖ್ಯೆಗಳು. ಹಾಗಿದ್ದರೆ ಪ್ರೀತಿ ಬಂಧನವೇ. ಅಗತ್ಯವೇ ಅನಗತ್ಯವೇ?. ಮೀರಾ ಜೋಶಿಯವರ ಕವನ “ಮರಳು ಗೂಡಿಗೆ” ಇಂತಹ ಒಂದು ಹದ ಹುಡುಕುವ ಪ್ರಯತ್ನ. ಕವಿತೆ ಓದಿದಂತೆ ಅದಕ್ಕೆ ಅಧ್ಯಾತ್ಮಿಕ ದೃಷ್ಟಿಕೋನ ಪ್ರಾಪ್ತವಾಗುವುದು ಕವಿತೆಯ ಇನ್ನೊಂದು ಮುಖ. ಮೊದಲು ಕವಿತೆ ನೋಡೋಣ. ** *** *** ಮರಳು ಗೂಡಿನತ್ತ ಎನ್ನಂಗಳದಲಿ ಮೊಟ್ಟೆಯೊಡೆದುಮರಿಯೊಂದು ಹೊರ ಬಂದಿತ್ತುಕೋಮಲ ನಿಸ್ಸಹಾಯಕಬಯಸಿದರೂ ಹಾರಲಾರದು ಹಾಲುಣಿಸಿ ನೀರುಣಿಸಿಕಾಳುಗಳಕ್ಕರದಿ ತಿನಿಸಿಬೆಳೆಯುವದ ನೋಡುತಲಿದ್ದೆನೋಡಿ ನಲಿಯುತಲಿದ್ದೆ ಪಿಳಿ ಪಿಳಿ ಬಿಡುವ ಕಣ್ಣಿನಲಿಇಣುಕಿದಾ ಮುಗ್ಧತೆಕಂಡಾಗ ಹೃದಯದಲಿಸೂಸಿತು ಮಮತೆ ಬೆಳೆ ಬೆಳೆದಂತೆ ಗರಿಗೆದರಿನನಗೇನೋ ಭಯಹಾರಿಹೋಗುವದೇನೋ ಎಂಬಕಳವಳ ವ್ಯಾಕುಲ ಅಂತೆಯೇ ಪಂಜರದಲಿಟ್ಚೆಎಲ್ಲ ಸುಖವ ಕೊಟ್ಟೆಸದಾ ಕಣ್ಣಿನ ಕಾವಲಿಟ್ಟೆಹಾರದೆಂದು ಸಂಭ್ರಮ ಪಟ್ಚೆಒಂದು ದಿನ ಪ್ರೀತಿಯುಕ್ಕಿ ಅಂಜಲಿಯಲ್ಹಿಡಿದುಮುದ್ದು ಮಾಡುತಲಿದ್ದೆಹೃದಯ ಸಮೀಪದಲ್ಲಿಟ್ಟು ಸುಖಿಸುತಿದ್ದೆಭಾವಾವೇಶದಲಿ ಎಲ್ಲಿಯೋ ನೋಡುತಿದ್ದೆ ಹಕ್ಕಿಯನಿಡಲು ಪಂಜರದಲಿಪ್ರೇಮ ಸೂಸುತ ನೋಡಿದೆ ಕೈಗಳಲಿಅಂಜಲಿ ಯಾವಾಗಲೋ ಸಡಿಲಿಸಿತ್ತುಹಕ್ಕಿ ಗರಿಗೆದರಿ ಹಾರಿ ಹೋಗಿತ್ತು ಅತ್ತಿತ್ತ ಅರಸಿದೆವ್ಯರ್ಥ ನೋಟ ಹರಿಸಿದೆಪಂಜರ ಚಿತೆಯೇರಿತುಇನ್ನೂ ನಿಂತೇ ಇದ್ದೇನೆ ನಿರೀಕ್ಷೆಯಲಿಎಂದಾದರೂ ಮರಳಿ ಬರಬಹುದೇನೋಹೊಸದೊಂದು ಗೂಡಿಗೆ ** *** *** ಈ ಕವಿತೆಯಲ್ಲಿ ಕವಿಯ ಅಂಗಳದಲ್ಲಿ ಅನಾಥ ಮೊಟ್ಟೆ, ಅದು ಮರಿಯಾಗುತ್ತೆ. ಹಕ್ಕಿ ಮರಿ.ಕವಿ ಆ ಮರಿಯನ್ನು ಸಾಕಿ ಸಲಹುತ್ತಾಳೆ.ಕವಿಗೆ ಹಕ್ಕಿಯತ್ತ ಎಷ್ಟು ಪ್ರೇಮ!. ಹಾರಿ ಹೋದರೆ! “ಬೆಳೆ ಬೆಳೆದಂತೆ ಗರಿಗೆದರಿನನಗೇನೋ ಭಯಹಾರಿಹೋಗುವದೇನೋ ಎಂಬಕಳವಳ ವ್ಯಾಕುಲ” ಈ ಕವಿತೆಯಲ್ಲಿ ಕವಿ ಪ್ರಶ್ನಿಸದಿದ್ದರೂ ಮನಕ್ಕೆ ಬರುವ ಪ್ರಶ್ನೆ ..ಹಾರಲು ಬಿಡಬೇಕೇ ಬೇಡವೇ?ಅಂತೂ ಕವಿ ಒಂದು ಪಂಜರ ತಂದು….. “ಅಂತೆಯೇ ಪಂಜರದಲಿಟ್ಚೆಎಲ್ಲ ಸುಖವ ಕೊಟ್ಟೆಸದಾ ಕಣ್ಣಿನ ಕಾವಲಿಟ್ಟೆಹಾರದೆಂದು ಸಂಭ್ರಮ ಪಟ್ಚೆ” ಇಲ್ಲಿರುವ ವಿಪರ್ಯಾಸ ಗಮನಿಸಿ. ಕವಿಗೆ, ಹಕ್ಕಿಯ ಮೇಲೆ ಪ್ರೇಮ. ಹಕ್ಕಿ ಹಾರಿ ಹೋಗುವ,ತನ್ನ ಆಧೀನದಿಂದ ದಾಟಿಹೋಗುವುದನ್ನು ಸುತರಾಂ ಒಪ್ಪಲಾರ. ಆದರೆ ಹಕ್ಕಿ!. ಹಾರಲೇ ಹುಟ್ಟಿದ ಜೀವವದು. ಪಂಜರ ಅದಕ್ಕೆ ಬಂಧನ. ಹಾಗೊಂದು ದಿನ ಬೊಗಸೆಯಲ್ಲಿ ಹಕ್ಕಿ ಹಿಡಿದು ಪ್ರೇಮದಲ್ಲಿ ಮೈಮರೆತಾಗ ಹಕ್ಕಿ ಹಾರಿ ಹೋಗುತ್ತೆ.ಕವಿ ಪಂಜರವನ್ನು ಕಳೆದು ಮುಂದೊಂದು ದಿನ ಹಕ್ಕಿ ಬರಬಹುದೇನೋ ಎಂದು ಕಾಯತ್ತಾನೆ.ಇದಿಷ್ಟು ನೇರವಾದ ಅರ್ಥ. ಇದರೊಳಗೆ ಅಡಕವಾಗಿರುವ ಧರ್ಮ ಸೂಕ್ಷ್ಮವನ್ನು ಗಮನಿಸಿ. ಕವಿಯ ಪಂಜರದೊಳಗೆ ಹಕ್ಕಿ, ಅದು ಕವಿಯ ಪ್ರೇಮ. ಹಕ್ಕಿಗೆ ಅದು ಬಂಧನ. ಹಾಗಿದ್ದರೆ,ಪ್ರೇಮ ಬಂಧನವೇ, ಪ್ರೇಮವಿರಬಾರದೇ?ಸಮಾಜದಲ್ಲಿ ಹಲವಾರು ಅಮ್ಮಂದಿರು, ಮಕ್ಕಳನ್ನು ಅತಿಯಾಗಿ ಪ್ರೀತಿಸಿ ( pampered child), ಮಕ್ಕಳ ಬೆಳವಣಿಗೆ ಆಗದಿರುವ ಸಾಮಾಜಿಕ ಸಮಸ್ಯೆಯನ್ನು ಕವಿ ಎಷ್ಟು ಚಂದ ಕಟ್ಟಿ ಕೊಟ್ಟಿದ್ದಾನೆ. ಹಾಗಿದ್ದರೆ ಪ್ರೇಮ ಎಂದರೆ ಪೂರ್ಣ ಸ್ವಾತಂತ್ರ್ಯವೇ?. ಪೂರ್ಣ ಸ್ವಾತಂತ್ರ್ಯ ಅನುಭವಿಸಿದ ಮಕ್ಕಳು ದಾರಿ ತಪ್ಪಿ ವ್ಯಸನಗಳಿಗೆ ದಾಸರಾದದ್ದೂ ಕಾಣಿಸುತ್ತೆ. ನಾನು ಮೊದಲೇ ಹೇಳಿದ ಗಾಳಿಪಟದ ಉದಾಹರಣೆಯಲ್ಲಿ ಹೇಳಿದ ಹಾಗೆ,ಹಿಡಿದೂ ಬಿಟ್ಟೂ ಪುನಃ ಪುನಃ ಮಾಡಿದಾಗಲೇ ಗಾಳಿಪಟ ಹಾರುತ್ತೆ ಎತ್ತರದಲ್ಲಿ.ಭೂಮಿಯ ಗುರುತ್ವಾಕರ್ಷಣ ಶಕ್ತಿ ಇಲ್ಲದಿದ್ದರೆ ನಮಗೆ ನೆಲದಲ್ಲಿ ನೇರವಾಗಿ ಧೃಡವಾಗಿ ನಿಲ್ಲಲು, ನಿಯಂತ್ರಣದಲ್ಲಿ ಚಲಿಸಲು ಆಗಲ್ಲ. ಗುರುತ್ವಾಕರ್ಷಣ ಶಕ್ತಿ ಅಧಿಕವಾದರೆ ಮಲಗಿದಲ್ಲೇ ಬಂದಿಯಾಗುತ್ತೇವೆ. ಹಾಗೆಯೇ ಪ್ರೇಮದ ಕಾಂತೀಯ ಶಕ್ತಿಯನ್ನು ಅತ್ಯಂತ ವಿವೇಚನೆಯಿಂದ ಪ್ರಯೋಗಿಸುವುದು, ಮಗುವಿನ ಬೆಳವಣಿಗೆಗೆ ಅಗತ್ಯ. ಮಗು ಬೆಳೆದ ಮೇಲೆ ಅದರ ಕಾಲಲ್ಲಿ ನಿಲ್ಲುವ, ರೆಕ್ಕೆ ಬೀಸಿ ಹಾರುವುದರಲ್ಲಿ, ಹಾರಲು ಬಿಡುವುದರಲ್ಲಿ ನಾವೆಲ್ಲರೂ ಸಂಭ್ರಮ ಪಡಬೇಕು ತಾನೇ. ಈಗ ಕವಿತೆಯ ಎರಡನೆಯ ಅರ್ಥಸಾಧ್ಯತೆಗೆ ಬರೋಣ. ” ಎನ್ನಂಗಳದಿ ಮೊಟ್ಟೆಯೊಡೆದು ಮರಿಯೊಂದು ಹೊರ ಬಂದಿತ್ತು” ಅಂಗಳ ಎಂಬ ಪದದ ವ್ಯಾಪ್ತಿ ದೊಡ್ಡದು. ಅದು ಚಿಂತಕನ ಮನದಂಗಳ ಆಗಬಹುದು. ಮನದಂಗಳದಲ್ಲಿ ಮೊಟ್ಟೆಯೊಡೆದುಮರಿ ಹೊರಬರುವುದು ಒಂದು ಹೊಸ ಚಿಂತನೆ, ಐಡಿಯಾ, ಭಾವನೆ, ಕವಿತೆ,ಕನಸು ಆಗಬಹುದು.ಇವಿಷ್ಟನ್ನೂ ಮನಸ್ಸಿನೊಳಗೆ ಬೆಳೆಸುತ್ತೇವೆ. ನಮ್ಮ ಯೋಚನೆಯನ್ನು, ಅತ್ಯಂತ ಪ್ರೀತಿಸುತ್ತೇವೆ. ಅವುಗಳನ್ನು ಸಿದ್ಧಾಂತ ಎಂಬ ಪಂಜರದೊಳಗೆ ಬಂದಿಯಾಗಿಸಿ ಖುಷಿ ಪಡುತ್ತೇವೆ. ಒಂದು ದಿನ ನಂಬಿದ ಸಿದ್ಧಾಂತ ಮುರಿದಾಗ ಚಿಂತನೆಗೆ ಸ್ವಾತಂತ್ರ್ಯ ಸಿಕ್ಕಿ ಅದು ನಾಲ್ಕೂ ದಿಕ್ಕುಗಳಿಗೆ ಹರಿಯುತ್ತೆ. ಇಂತಹ ಸ್ವಸಿದ್ಧಾಂತದೊಳಗೆ ಬಂದಿಯಾದ ಹೊರಬರಲಾರದ ಅದೆಷ್ಟು ಚಿಂತಕರು ನಮ್ಮ ಸುತ್ತುಮುತ್ತಲೂ.ಹಾಗೆ ಬಂದಿಯಾದವರು, ಬೆಳವಣಿಗೆ ಸ್ಶಗಿತವಾಗಿ ಕಾಲಗರ್ಭದೊಳಗೆ ಕಾಣೆಯಾಗುವುದನ್ನೂ ಕಾಣುತ್ತೇವೆ. ಒಮ್ಮೆ ಚಿಂತನೆ ಕವಿತೆಯಾಗಿಯೋ, ಕಲೆಯಾಗಿಯೋ,ಚಿತ್ರವಾಗಿಯೋ ಹೊರಬಂದರೆ ಹಳೆಯ ಪಂಜರದ ಪಳೆಯುಳಿಕೆಗಳನ್ನು ದಹಿಸಿ ಮನಸ್ಸನ್ನು ಹಸಿಯಾಗಿಸಿ, ಇನ್ನೊಂದು ಚಿಂತನೆಯ ಹಕ್ಕಿ ಗೂಡುಕಟ್ಟಲು ಅನುವು ಮಾಡಿಕೊಡಬೇಕು. ಇನ್ನು ಮೂರನೆಯ ಅರ್ಥಕ್ಕೆ ಬರೋಣ. ಕವಿತೆಯ ಶೀರ್ಷಿಕೆ ” ಮರಳು ಗೂಡಿಗೆ”ಮರಳು ಎಂಬುದು ವಾಪಸ್ ಬರುವುದು ಎಂಬ ಸಾಧಾರಣ ಅರ್ಥ, ಮೇಲೆ ಹೇಳಿದ ಎರಡೂ ಇಂಟರ್ಪ್ರಿಟೇಷನ್ ಗಳಿಗೆ ಹೊಂದುತ್ತದೆ.ಆದರೆ ಮರಳು ಗೂಡಿಗೆ ಎಂಬುದು ಮರಳಿನಿಂದ ಮಾಡಿದ ಗೂಡಿಗೆ ಎಂಬ ಅರ್ಥವೂ ಇದೆ ತಾನೇ.‌ಮರಳು ಒದ್ದೆಯಾದಾಗ ಗೂಡು ಮಾಡಿದರೆ ನಿಲ್ಲುತ್ತೆ. ಮರಳಿಂದ ನೀರಿನ ಅಂಶ ಒಣಗಿದಾಗ ಅದು ಕುಸಿಯುತ್ತೆ. ಅಷ್ಟೂ ತಾತ್ಕಾಲಿಕ ಅದು. ನಶ್ವರ ಅದು. ಪುರಂದರ ದಾಸರ ಗಿಳಿಯು ಪಂಜರದೊಳಗಿಲ್ಲ ಎಂಬ ಪದ್ಯದಲ್ಲಿ, ಒಂಭತ್ತು ಬಾಗಿಲ ಮನೆ ಅಂತ ಈ ಪಂಜರವನ್ನು ವರ್ಣಿಸುತ್ತಾರೆ. ಈ ಮರಳು ಮನೆ ಅದೇ ಪಂಜರವೇ?ಪದ್ಯದ ಅಷ್ಟೂ ಸಾಲುಗಳೂ ದೇಹ,ಆತ್ಮವನ್ನು ಸಲಹುವಂತೆಯೇ ಇದೆ. ಕೊನೆಯ ಪ್ಯಾರಾದಲ್ಲಿ, ಗಮನಿಸಿ. “ಪಂಜರ ಚಿತೆಯೇರಿತುಇನ್ನೂ ನಿಂತೇ ಇದ್ದೇನೆ ನಿರೀಕ್ಷೆಯಲಿಎಂದಾದರೂ ಮರಳಿ ಬರಬಹುದೇನೋಹೊಸದೊಂದು ಗೂಡಿಗೆ” ಅಸ್ತಿಪಂಜರ, ಆತ್ಮದ ಹಕ್ಕಿ ಬಿಟ್ಟು ಹೋದಾಗ ಚಿತೆಯೇರುತ್ತೆ. ಆತ್ಮ ಪುನಃ ಹೊಸ ಗೂಡು ಹುಡುಕಿ ಮರಳಿ ಬರುವುದೇ. “ಪುನರಪಿ ಜನನಂ ಪುನರಪಿ ಮರಣಂಪುನರಪಿ ಜನನೇ ಜಠರೇ ಶಯನಂ” ಎಂಬ ಶಂಕರಾಚಾರ್ಯರ ಗೀತೆಯ ಸಾಲುಗಳ ಹಾಗೆ ಆತ್ಮ ಗೂಡಲ್ಲಿ ವಾಸ ಹೂಡುತ್ತೆ. ಗೂಡು ಬಿಟ್ಟು ಹೊಸ ಗೂಡಿಗೆ ವಾಪಸ್ಸಾಗುತ್ತೆ.ಇಲ್ಲಿನ ಗೂಡು,ಮರಳು ಗೂಡು.ನಶ್ವರವೂ ಹೌದು. ಪುನಃ ಪುನಃ ಮರಳಬೇಕಾದ ಗೂಡೂ ಹೌದು. *********************************************** ಹುಟ್ಟಿದ್ದು, ಗಡಿನಾಡ ಜಿಲ್ಲೆ,ಕೇರಳದ ಕಾಸರಗೋಡು ಜಿಲ್ಲೆಯಲ್ಲಿ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ, “ಮೆಟೀರಿಯಲ್ಸ್ ಸೈನ್ಸ್” ನಲ್ಲಿ ಸ್ನಾತಕೋತ್ತರ ಪದವಿ, ಐ.ಐ.ಟಿ. ಮದರಾಸು, ವಿನಿಂದ ಭೌತಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದು, ಕಳೆದ ಎರಡು ದಶಕದಲ್ಲಿ, ಡಿ.ಆರ್.ಡಿ.ಒ. ಹೈದರಾಬಾದ್ ನಲ್ಲಿ, ವಿಜ್ಞಾನಿಯಾಗಿ ವೃತ್ತಿ. ಸಾಹಿತ್ಯ, ಓದು ಬರಹ, ಹಾಗೂ ಸಂಗೀತ ಹೃದಯಕ್ಕೆ,ಹತ್ತಿರ

ಕಬ್ಬಿಗರ ಅಬ್ಬಿ -9 Read Post »

ಕಾವ್ಯಯಾನ

ರೇಖಾಭಟ್ ಕಾವ್ಯಗುಚ್ಛ

ರೇಖಾಭಟ್ ಕಾವ್ಯಗುಚ್ಛ ಮರುಹುಟ್ಟು ಇಳಿಯಬೇಕು ನೆನಪಿನಾಳಕೆಮುದಗೊಳ್ಳಬೇಕುಎದುರಿಗೆ ಹಾಸಿ ಹರವಿಕೊಂಡುಚೆನ್ನ ನೆನಪುಗಳಆಯಸ್ಸು ಹೆಚ್ಚಿಸಬೇಕುಮೆತ್ತಗಾದ ಹಪ್ಪಳ ಸಂಡಿಗೆಗಳುಬಿಸಿಲಿಗೆ ಮೈಯೊಡ್ಡಿಗರಿಗರಿಯಾಗಿ ಡಬ್ಬಿ ಸೇರುವಂತೆನೆನಪುಗಳು ಸದಾ ಬೆಚ್ಚಗಿರಬೇಕು ಒತ್ತಿ ತಡೆ ಹಿಡಿದ ನೋವಿಗೂಆಗಾಗ ಬಿಕ್ಕಲುರಂಗ ಸಜ್ಜಿಕೆ ಬೇಕುತುಂಬಿಕೊಂಡ ಮಂಜು ನಂಜುಪೂರ್ತಿ ಹೊರಹೋಗಬೇಕು ಬಾಚಿ ಕರೆಯಬೇಕುನೆನಪೆಂಬ ನೆಂಟನನ್ನುನಿನ್ನೆಯ ನಂಟಿನ ಗಂಟುಗಳಬಿಡಿಸುತ್ತ ಹರಟಬೇಕುಅಂಟಿಯೂ ಅಂಟದಿರುವನೆನಪಿಗೆ ಮೀಸಲಾದಸಾಕ್ಷ್ಯಗಳಹೊರಗೆಳೆದು ಹೊದೆಯಬೇಕು ಇರಬೇಕು ನಿನ್ನೆಗಳಿಗೂನೆನಪುಗಳೆಂಬ ಮರುಹುಟ್ಟುಆಗಾಗ ಹಾಯುತಿರಲಿಇಲ್ಲಸಲ್ಲದ ನೆಪವಿಟ್ಟು.. ಅರ್ಥವಾಗದಿದ್ದರೆ ಹೇಳಿ ಅವನು ನನ್ನ ಕಂಗಳಲ್ಲಿಹೊಳೆಯುತ್ತಾನೆಹೊಳೆಯೂ ಆಗುತ್ತಾನೆಇಷ್ಟು ಸಾಕಲ್ಲವೇ ನಿಮಗೆಅವನು ನನಗೇನೆಂದು ತಿಳಿಯಲು ಅವನ ನಗುವ ಕಂಡು ನಾನುಪೂರ್ತಿ ಖಾಲಿಯಾಗುತ್ತೇನೆಆ ನಗು ನನ್ನ ಸಂಧಿಸಿದಾಗಮತ್ತೆ ತುಂಬಿಕೊಳ್ಳುತ್ತೇನೆನಮ್ಮ ನಡುವಿನ ಸಣ್ಣ ಮೌನಆಕಾಶದ ತಾರೆಗಳುಸದ್ದಿಲ್ಲದೆ ಮಿನುಗಿದಂತೆ ತೋರುತ್ತದೆನಾನು ಅವುಗಳ ಬೊಗಸೆಗೆ ತಂದುಸಂಭ್ರಮಿಸುತ್ತೇನೆ ಒಲವರಾಗ ಸಮ್ಮೋಹಗಳೆಲ್ಲತುಟಿಯ ಖಾಯಂ ರಹವಾಸಿಗಳಾಗಿಅವ ಮಾತಿಗಳಿದರೆಮಾಂತ್ರಿಕ ಲೋಕ ತೆರೆದುಕೊಂಡುನಾ ಕಳೆದೇ ಹೋಗುತ್ತೇನೆಅವನಲ್ಲಿ ಅವತರಿಸಲು ಬಿಡದೇಹವಣಿಸುತ್ತೇನೆ ಈಗ ನಿಮಗೆ ಖಂಡಿತಅರ್ಥವಾಗಿದೆ ಬಿಡಿಅವನು ನನಗೇನೆಂದುಅರ್ಥವಾಗದಿದ್ದರೆನೀವು ನಿಮ್ಮವನ ಒಮ್ಮೆನೆನಪು ಮಾಡಿಕೊಳ್ಳಿಆಮೇಲೆ ಅರ್ಥವಾಗದಿದ್ದರೆ ಹೇಳಿ ಬೆಂಬಲಿಸುವ ಬನ್ನಿ ನಾವು ನದಿಯಾಗಿ ಹರಿಯಬಲ್ಲೆವುಸಾಧ್ಯವಾದರೆ ಮಳೆಯಾಗಿ ಜೊತೆಯಾಗಿಆಣೆಕಟ್ಟು ಕಟ್ಟಿ ಬಳಸಿಕೊಳ್ಳಿಆದರೆ ನಮ್ಮ ಗಮ್ಯದೆಡೆಗಿನಒಂದೆರಡು ಬಾಗಿಲುಗಳನು ತೆರೆದೇ ಇಡಿ ನಾವೂ ಹಕ್ಕಿಯಾಗಿ ಹಾರಬಲ್ಲೆವುನಿಮ್ಮ ಬಾನ ವಿಸರ ನಮಗೂ ಸಲ್ಲಲಿಗಿಡುಗ ಹದ್ದುಗಳನ್ನು ಛೂ ಬಿಡಬೇಡಿನಮ್ಮ ನೆಲೆಗಳನ್ನು ಜೋಪಾನವಾಗಿಡಿಮತ್ತೆ ನಮ್ಮ ಗೂಡು ಒಂದೇ ಆಗಿರಲಿ ಹೊಗಳಿ ಅಟ್ಟದಲ್ಲೇ ಬಂಧಿಸದಿರಿದೇವರ ಪಟ್ಟ ಕಟ್ಟಿತಾಯಿ ಬೇರುಗಳು ಆಳಕ್ಕಿಳಿಯಲುನೆಲದಲ್ಲಿ ಪಾಲು ನೀಡಿಹಸಿರಾಗಿ ಎದ್ದು ನಿಂತಾಗಕೊಡಲಿ ಮಸೆಯದಿರಿ ಮರೆಯಲ್ಲೇ ಇರಿಸದಿರಿನಿಮ್ಮರ್ಧವಾದ ನಾವು ಕಾಣದಂತಿದ್ದರೆ ಹೇಗೆ ಪೂರ್ಣವಾಗುವಿರಿ ನೀವುನಮಗಾಗಿ ಬೇಡಿಕೆಯಲ್ಲ ಇದುಪೂರ್ಣತೆಗಾಗಿಪರಸ್ಪರ ಬೆಂಬಲಿಸುವ ಬನ್ನಿಹೊಸ ಕನಸನು ಹಂಬಲಿಸುವ ಬನ್ನಿ *****************************************

ರೇಖಾಭಟ್ ಕಾವ್ಯಗುಚ್ಛ Read Post »

ಅನುವಾದ

ಅನುವಾದ ಸಂಗಾತಿ

ಅವ್ವ ಕನ್ನಡ ಮೂಲ: ಎ.ಜಿ.ರತ್ನಾ ಕಾಳೇಗೌಡ ಇಂಗ್ಲೀಷಿಗೆ: ರತ್ನಾ ನಾಗರಾಜ್ ಏನೆಲ್ಲ ಅಡಗಿದೆಅವ್ವ ನಿನ್ನೆದೆಯೊಳಗೆನಿನ್ನ ತೊಡೆಯ ಮೇಲೆ ತಲೆಯಿಟ್ಟು ಮಲಗಿ ರಾಗಿತಲೆಯೊಳಗೆ ಬೆರಳುಗಳಿಂದತಡಕಿ ತಡಕ ಹೇನು ಹೆಕ್ಕಿಸಾಹಿಸುತ್ತಿದ್ದೆಆಗ ಅದೇನೋ ಅಕ್ಷರ ವಲ್ಲದಸ್ವರ ನಿನ್ನ ಬಾಯಿಂದಎಷ್ಟೋ ಸಾರಿ ಅರ್ಥಕ್ಕಾಗಿಹುಡುಕಿ ಸೋತಿದ್ದೇನೆಸಿಗಲಿಲ್ಲ ನೀನು ಹೇಳುತ್ತಿದ್ದಸಂಗತಿಗಳೆಲ್ಲನೆನಪಿನಲ್ಲಿದ್ದಿದ್ದರೆಒಂದೊಂದು ಮಹಾಗ್ರಂಥವಾಗುತ್ತಿದ್ದವು ಇಂದು ವಾರಗಿತ್ತಿಯರ ಕಾಟಗಂಡನ ಕಾಟ ಸಾಲದು ಎಂದು ಅತ್ತೆ ಮಾವನ ಕಾಟಎಲ್ಲವನ್ನು ಹೇಗೆ ಸಹಿಸಿಕೊಂಡೆ ಅವ್ವನಿನ್ನ ಒಂದೊಂದು ಕಣ್ಣೀರಕಥೆಯನ್ನು ಹೇಳುವಾಗನಾನು ಬಿಕ್ಕಿ ಬಿಕ್ಕಿ ಅತ್ತಿದ್ದೆ ಸಾರಿಗೆ ಉಪ್ಪು ಜಾಸ್ತಿ ಆಗಿದೆಯಾಕೆಂದುಕೊಳ್ಳಿಯಿಂದಲೇಮುಂಗೈಗೆ ಬೇರೆ ಹಾಕಿದ್ದಳುಅತ್ತೆಸುಟ್ಟ ಕಲೆಯನ್ನು ತೋರಿಸಿದ್ದೆನನ್ನ ಕರುಳು ಕಿವಿಚಿ ಬಾಯಿಗೆಬಂದಂತಾಗಿತ್ತು ಆಸ್ತಿ ಮನೆ ಎಲ್ಲ ಇದ್ದರೂನೆಮ್ಮದಿ ಯಿಲ್ಲದ ದಿನಗಳನ್ನುಸವೆಸಿದೆನಿನ್ನ ಆಸೆ ಆಕಾಂಕ್ಷೆ ಗಳೆಲ್ಲಚಿಂತೆಯ ಚಿಂತೆಯಲ್ಲಿಸುಟ್ಟುಹೋಯ್ತುನಿಟ್ಟುಸಿರಿನ ಅಲೆಯಲ್ಲಿಕೊಚ್ಚಿ ಹೋದವು ಅವ್ವ ನಾನೀಗ ಬೆಳೆದು ದೊಡ್ಡವಳಾಗಿದ್ದೇನೆನೌಕರಿಯೂ ಸಿಕ್ಕಿದೆಕೈ ತುಂಬ ಸಂಬಳನಿನ್ನ ಬರಿದಾದ ಮೂಗು ಕಿವಿಕೈಗೆವಜ್ರದ ಮೂಗುತಿ ಓಲೆ ಕಡಗಕೊಡಿಸುತ್ತಿದ್ದೆಆದರೆ…ಆದರೆ….ಈಗನೀನಿಲ್ಲ ಅವ್ವ … ನೀನಿಲ್ಲ Mother What all is hidden in your heart ! I was laying my head on your lap Your fingers were searching lice in my head and killing them one by one your were murmuring some words which I could not catch up with and struggled a lot to understand, but failed. The facts and issues that you had told me If I could remember them each one would have become a collection of a Great book today Just because the curry was a little bit salty my mother in law put a burn line from the fire stick on my fore hand , when I showed the burnt mark out of pain , your tummy seemed to be squeezed out of your mouth Though I had money and wealth I passed my days restlessly All your sweet dreams were burnt to ashes in your death in a deep sigh all were slushed Mother, now I have grown up I even got a job and earn a handful I wanted to buy you a Diamond nose ring, earrings , a bracelet for your bare ears and hands but to adorn it your are not there *********************************

ಅನುವಾದ ಸಂಗಾತಿ Read Post »

You cannot copy content of this page

Scroll to Top