ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಕಾವ್ಯಯಾನ

ಗಝಲ್ ಸುಜಾತ ಲಕ್ಷ್ಮೀಪುರ ಮಾತು ಮಾತಿಗೆ ಕಿಡಿ ತಾಗಿಸಿ ಸುಡುವುದು ಸಹಜ ಧರ್ಮವಲ್ಲಸುಮ್ಮನೇ ಮೌನದ ಅಗಾಧ ಕೂಪಕೆ ದೂಡುವುದು ಸರಿಯಲ್ಲ. ಮೌನವೂ ಮಣಭಾರವಾಗಿ ಕಾಡುವುದಿಲ್ಲವೆ ಏಕಾಂತದಿಕಣ್ಣಿನಲ್ಲೇ ಒಲವನು ಸೂಸಬಹುದು ಕೊಲ್ಲುವುದು ತರವಲ್ಲ ತಪ್ಪು ಮಾಡಿ ಕ್ಷಮೆ ಕೇಳುವುದೇ ದೊಡ್ಡ ವಿಚಾರವಲ್ಲಾಪ್ರೀತಿಗೆ ಶರಣಾಗಲು ಅಹಂ‌ಕಾರ ಸರಿಸುವುದು ಸೋಲಲ್ಲ ಬೆಳಕು ಮೂಡಲು ತಮವು ಅಳಿದೂ ಜಗವೆಲ್ಲಾ ಬೆಳಗುತ್ತದೆಮೈಮನವೆಲ್ಲ ಆವರಿಸಲು ಒಲವಲ್ಲದೆ ಬೇರೆ ಪಥವಿಲ್ಲ ಶಿವೆ,ಕಾಡುವ ಬಳ್ಳಿ ಬಿಡಿಸಿಕೊಳ್ಳುವುದು ಸಾಧ್ಯವೆ ನಿನ್ನಂತೆಎರಡಳಿದು ಒಂದಾಗಲು ಸವಿ ಪ್ರೇಮವಲ್ಲದೆ ಜಗವಿಲ್ಲ *******************************.

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನಿನ್ನ ಸೇರೋ ತವಕ ಪ್ಯಾರಿಸುತ ನಿನ್ನೂರು ದಾರಿಯು ಸವಿದಷ್ಟುದೂರಹವೆ ತುಂಬಿದ ಗಾಲಿಗಳು ಉರುಳಿದಷ್ಟುಮತ್ತಷ್ಟು ದೂರಉರುಳಿ ಹೊರಟ ಗಾಲಿಯಲ್ಲಿ ಹವೆಯಿತ್ತುನಿನ್ನ ನೆನೆದು ಬರುತ್ತಿರುವ ನನ್ನಲ್ಲಿ ಚಲವಿತ್ತುಪ್ರಯಾಸಗೊಂಡೆ,ಅನಾಯಾಸಗೊಂಡೆಕತ್ತಲು ಆವರಿಸಿದ ಕಪ್ಪು ಹೊಲದ ನಟ್ಟ ನಡುವೆಬೆಳೆದಿದ್ದ ಒಂಟಿ ಬೇವಿನಮರದಬುಡದಲ್ಲಿ ಮಗ್ಗಲು ಭುವಿಗೆ ಹೊಂದಿಸಿಮಲಗಿಕೊಂಡುನಿನ್ನ ಸೇರೋ ಕನಸು ಕಾಣುತ್ತಿದ್ದೆಕನಸನ್ನು ಭಗ್ನ ಮಾಡಿ,ಮತ್ತೆನಿನ್ನೂರು ದಾರಿ ಹಿಡಿಯಲುಪ್ರೇರೇಪಿಸಿದ್ದು ಅದೇ ಸೊಳ್ಳೆಅದು ನೀನೋ ಅಥವಾ ನಿಜವಾಗಿಯೂ ಸೊಳ್ಳೆಯೂತರ್ಕಕ್ಕೆ ಇಳಿಯುದಿಲ್ಲಅದು ಕಚ್ಚಿ ಹೋದ ಜಾಗದಲ್ಲಿ ನೀ ಕಚ್ಚಿದ ಹೋಲಿಕೆಯಿದೆದಾರಿಯುದ್ದಕ್ಕೂ ಮೈಲುಗಲ್ಲಿನ ಮೇಲೂ ನಿನ್ನದೇಸ್ವಾಗತಗೀತೆ,ಅದೆಷ್ಟು ಚಂದ ಅನ್ನುತ್ತಿಯಾ…?ನೋಡುತ್ತಾ,ಕೇಳುತ್ತಾ ಅಲ್ಲೇ ನಿಂತುಬಿಡಬೇಕುಇಲ್ಲ,ನಿನ್ನ ನೋಡುವ ತವಕದಿ ಓಡಿ ಬರಲೇ…?ಸೂರ್ಯ ನಿನ್ನ ಹಣೆಯ ಕುಂಕುಮವನ್ನು ಹೋಲುತ್ತಿದ್ದಗಾಳಿಯು ಸುಗಂಧ ಪುಷ್ಪ ಹೊತ್ತು ತರುತ್ತಿದ್ದಹಕ್ಕಿಗಳು ಮರಳಿ ಗೂಡಿನಡಿಗೆ ಸಾಗುತ್ತಿದ್ದಗಳಿಗೆಯಲಿ ನಮ್ಮಿಬ್ಬರ ದೇಹಗಳು ಒಟ್ಟುಗೂಡುತ್ತಿದ್ದವುಅಲ್ಲೊಂದಿಷ್ಟು ಪೋಲಿ ಸಂಜ್ಞೆಗಳು ಆಟ ಆಡುತ್ತಿದ್ದವುಭಾವನೆಗಳು ಕಟ್ಟಿಗೊಂಡ ಹಗ್ಗದಿಂದ ತಪ್ಪಿಸಿಕೊಂಡುಹಿಂಡು ಹಿಂಡಾಗಿ ಬರುತ್ತಿದ್ದವುಮತ್ತದೇ ಆಸೆಯಿಂದ ಸುಗಂಧಿ ಪರಿಮಳವನ್ನು ಬೆನ್ನುಬಿದ್ದುಸೂರ್ಯ ಕೆಂಪಾಗುವ,ಹಿತವಾಗುವಸಮಯಕ್ಕೆ ನಿನ್ನೂರಿಗೆ ಕಾಲಿರುಸುವೆನಿನ್ನೆಲ್ಲ ಸಮಯವನ್ನು ಕಾಯ್ದಿರುಸುವೆಯಾ…? *********************************

ಕಾವ್ಯಯಾನ Read Post »

ಅನುವಾದ

ಅನುವಾದ ಸಂಗಾತಿ

ಧಗೆ ಕನ್ನಡ ಮೂಲ; ಸುನೀತಾ ಕುಶಾಲನಗರ ಇಂಗ್ಲೀಷಿಗೆ:ಸಮತಾ ಆರ್ ಅದು ನಾಲ್ಕನೆಯ ಪಂಚಾಯತಿ ಬಾವಿ ಇನ್ನೂನೀರಿತ್ತೆನ್ನುವ ಕುರುಹೆಲ್ಲಿ ?ಹುಡುಕುವ ಕಣ್ಣೆವೆಗಳಿಗೆ ಯುದ್ಧಮುಂದೆ ಸಾಗಿ ಪ್ರಯೋಜನವಾದರೂ ಏನುಬಿಸಿಲ ಧಗೆಗೆ ರಿವರ್ಸ್‌ಗೇರ್ ಹಾಕಿದಭಯದ ಬೆವರ ಹನಿಕಣ್ಣುಗಳಿಗೆ ಬೀಗ ಜಡಿದುಕಂಡಿದ್ದ ಜಲರಾಶಿ ಮತ್ತೆ ಕಂಡೆಕಣ್ಣ ಹನಿ, ಬೆವರ ಹನಿಜೊತೆಗೂಡಿ ಬಿಟ್ಟ ಕಣ್ಣುಆಲಿಕಲ್ಲು ಅರಸಿಎಡವಿದ ಕಲ್ಲಿಗೆ ರಕ್ತದೋಕುಳಿಆಕಾಶದ ಹೃದಯ ಕಲ್ಲಾಗಿದೆಪಾದಪಗಳೂ ಚಲನ ಹೀನನದಿಯ ಬೆಸುಗೆಯಲ್ಲೂ ವಿರಸ‌ನರರ ವಿಲಾಸಿ ಜೀವನಈಗ ಸಣಕಲಾದ ಇಳೆಒಗಟು ಮಾತ್ರಬಾವಿಯ ಎಡಭಾಗದ ಮೂರನೆಯಒಣಗಿದ ಗದ್ದೆ ನಕ್ಕು ಹೇಳಿದೆ That is a fourth well digged by a councilBut where is the trace of water,Searched the batting eyelids.What’s the use of moving forward,When unable to bear the heatThe fearfull sweat dropsApplied the reverse gear..Locked the eyes to see theAquatic treasure once I had seen.The sweat and teardrops mixed upAnd opened the eyesThat searched for hailstones,But stumbled on a parched rockTo bathe it in blood. The stone hearted sky,the still floraThe dried river bed are all the giftsOf the luxurious life of the man.Now the thinning earth is just a riddleSaid the third parched fieldOn the left side of the well ,with a grin. ************************

ಅನುವಾದ ಸಂಗಾತಿ Read Post »

ಇತರೆ

ನನ್ನ ಇಷ್ಟದ ಕವಿತೆ

ಪೂಜಾ ನಾಯಕ್ ಬೆಳಗು ಜಾವ ರಚನೆ :ದ. ರಾ. ಬೇಂದ್ರೆ ಏಳು ಚಿನ್ನ, ಬೆಳಗಾಯ್ತು ಅಣ್ಣ, ಮೂಡಲವು ತೆರೆಯೆ ಕಣ್ಣ, ನಕ್ಷತ್ರ ಜಾರಿ, ತಮವೆಲ್ಲ ಸೋರಿ, ಮಿಗಿಲಹುದು ಬಾನ ಬಣ್ಣ ಜೇನ್ನೊಣದ ಹೆದೆಗೆ, ಹೂಬಾಣ ಹೂಡಿ, ಜುಮ್ಮೆಂದು ಬಿಟ್ಟ ಮಾರ ಗುಡಿಗೋಪುರಕ್ಕು, ಬಲೆ ಬೀಸಿ ಬಂದ, ಅಗೋ ಬೆಳಕು-ಬೇಟೆಗಾರ. ನಿಶೆಯಿಳಿದ ಉಷೆಯ, ಎಳನಗೆಯ ಬಗೆಗೆ, ಸೋತಿರಲು ಜಗವು ಸವಿಗೆ ಕಣ್ಣಿದಿರು ಒಂದು, ಕಟ್ಟಿತ್ತು ಕನಸು; ಕೂಗೊಂದು ಬಂತು ಕಿವಿಗೆ. ಮಕ್ಕಳಿರ ಕೇಳಿ, ರಸ ಕುಡಿಯಲೇಳಿ, ಹುಸಿನಿದ್ದೆಗಿದ್ದೆ ಸಾಕು ಈ ತುಂಬಿಬಾಳು, ತುಂಬಿರುವ ತನಕ, ತುಂತುಂಬಿ ಕುಡಿಯಬೇಕು. ಯಾವಾಗೊ ಕೋಳಿ ಕೂಗಿಹುದು ಏಳಿ, ತಡವೇಕೆ ಪಾನಕೇಳಿ ಮೊದಲಾಗಲೀಗ, ಅಂಗಡಿಯ ಕದವ ಈ ಕ್ಷಣಕೆ ತೆರೆಯ ಹೇಳಿ ಜೀವನದ ನದಿಗೆ ಸೆಳವಿಹುದು, ಮರಣ ಬಂದೀತು ಕ್ಷಣವು ಉರುಳಿ ಹೋದವರು ತಿರುಗಿ ಬಂದಾರೆ, ಅವರು ಬರಲಿಕ್ಕು ಇಲ್ಲ ಮರಳಿ. ಬಾನ್ ಹೊಗರಲುಂಟು, ಮರ ಚಿಗುರಲುಂಟು, ಬರಲುಂಟೆ ಸುಗ್ಗಿ ಮತ್ತೆ? ಮುಳುಗಿರಲಿ ಮುಪ್ಪು ಚಿಂತನದಿ, ತಾನು ಹರಯಕ್ಕೆ ಬೇರೆ ಹೊತ್ತೆ?    ನಿಜವಾದ ಕವಿತೆಯೆಂಬುದು ತನ್ನಷ್ಟಕ್ಕೆ ತಾನೇ ಇಂದಿನವರೆಗೆ ಉಳಿದಿದೆ ಮತ್ತು ಎಂದೆಂದಿಗೂ ಉಳಿಯುತ್ತದೆ ಎಂಬುದಕ್ಕೆ ಆಧುನಿಕ ಕನ್ನಡ ಸಾಹಿತ್ಯದ ಅಪೂರ್ವ ಪ್ರತಿಭೆಗಳಲ್ಲಿ ಒಬ್ಬರಾದ ದ. ರಾ. ಬೇಂದ್ರೆಯವರ ‘ಬೆಳಗು ಜಾವ’ ಕವಿತೆಯೇ ಒಂದು ಉತ್ತಮ ನಿದರ್ಶನವಾಗಿ ಇಂದಿಗೂ ನಮ್ಮ ಮುಂದೆ ಇದ್ದು ಈ ಕವಿತೆಯನ್ನು ಓದಿದ ಎಷ್ಟೋ ಯುವಕರ ಬಾಳನ್ನು ಹಸನಾಗಿಸಿದೆ ಎಂದರೆ ತಪ್ಪಾಗಲಿಕ್ಕಿಲ್ಲ . ಈ ಕವಿತೆಯನ್ನು ನಾನು ಮೊಟ್ಟಮೊದಲ ಬಾರಿ ಓದಿದ್ದು ನಾನು ದ್ವಿತೀಯ ಪಿಯುಸಿ  ಇರುವಾಗ ನಮ್ಮ ಕಾಲೇಜಿನ ಪಠ್ಯದಲ್ಲಿ.  ಅದ್ಯಾಕೋ ಗೊತ್ತಿಲ್ಲ ನನಗೆ ಈ ಕವಿತೆಯನ್ನು ಓದಿದಾಗ, ಒಂದು ಸಾರಿಯ ಓದಿಗೆ ಕೊನೆಗೊಳಿಸಬೇಕು ಎಂದೆನಿಸದೇ ಮಗದೊಮ್ಮೆ ಓದಬೇಕು ಎಂದೆನಿಸಿತು. ಆದರೆ ಮೊದಲ ಬಾರಿ ಓದಿದಾಗ ದ. ರಾ ಬೇಂದ್ರೆಯವರು ಕೇವಲ ಈ ಕವಿತೆಯಲ್ಲಿ ಮುಂಜಾನೆಯ ನಿಸರ್ಗದ ಸೌಂದರ್ಯವನ್ನಷ್ಟೇ ವರ್ಣನೆ ಮಾಡಿದ್ದಾರೆ ಎಂದು ಭಾವಿಸಿದ್ದೆ ತದನಂತರ ಈ ಕವಿತೆಯಲ್ಲಿ ಕೇವಲ ಬೆಳಗು ಜಾವದ ವರ್ಣನೆಯನ್ನಷ್ಟೇ ಮಾಡಿದ್ದಲ್ಲ, ಅದರಲ್ಲಿ ಯೌವನಿಗರಿಗೆ ನೀಡಿದ ಅದ್ಬುತವಾದ ಸಂದೇಶವನ್ನು ಕೂಡಾ ಕವಿ ತಮ್ಮ ಕವಿತೆಯೊಳಗೆ ಹುದುಗಿಸಿಟ್ಟಿದ್ದಾರೆ ಎಂದು ತಿಳಿದ ಬಳಿಕ ನನಗೆ ಈ ಕವಿತೆ ಇನ್ನೂ ಹೆಚ್ಚು ಇಷ್ಟವಾಯಿತು. ನವೋದಯ ಕವಿಗಳು ಪ್ರಕೃತಿ ಸೌಂದರ್ಯವನ್ನು ವರ್ಣಿಸುವ ಕೆಲವು ಪರಿಗಳನ್ನು ಇಲ್ಲಿ ಗಮನಿಸುವುದರ ಮುಖಾಂತರ ಬೆಳಗು ಜಾವದ ಅತ್ಯದ್ಭುತ  ಕಲ್ಪನೆ ಮತ್ತು ಅದರ ಮಹತ್ವವನ್ನು ನಾವು ಅರಿತುಕೊಳ್ಳಬಹುದು. ಮೊದಲಿಗೆ ಸೂರ್ಯೋದಯದ ಸರಳ ಸುಂದರ ವರ್ಣನೆ ನೋಡಿ : ಏಳು ಚಿನ್ನ, ಬೆಳಗಾಯ್ತು ಅಣ್ಣ, ಮೂಡಲವು ತೆರೆಯೆ ಕಣ್ಣ, ನಕ್ಷತ್ರ ಜಾರಿ, ತಮವೆಲ್ಲ  ಸೋರಿ, ಮಿಗಿಲಹುದು ಬಾನ ಬಣ್ಣ ಜೇನ್ನೊಣದ ಹೆದೆಗೆ, ಹೂಬಾಣ ಹೂಡಿ, ಝಂ ಎಂದು ಬಿಟ್ಟ ಮಾರ ಗುಡಿಗೋಪುರಕ್ಕು, ಬಲೆ ಬೀಸಿ ಬಂದ, ಅಗೋ ಬೆಳಕು ಬೇಟೆಗಾರ. ಇದು ಸುತ್ತಣ ನಿಸರ್ಗದಲ್ಲಿ ಒಂದು ಬೆಳಗಿನ ಸೌಂದರ್ಯಾನುಭವವನ್ನು ಪಡೆದ ಕವಿಯ ಉಲ್ಲಾಸದ ಕರೆಯನ್ನು ನೀಡಿದರೆ, ಮತ್ತೊಂದೆಡೆ ಯೌವನಿಗರಿಗೆ ಎಚ್ಚರಿಸುವ ಕರೆ! ಏನು ಸೋಜಿಗ ಈ ಕವಿಯ ರೀತಿ! ಪುಟ್ಟ-ಪುಟ್ಟ ಸಂಗತಿಯ ಸೌಂದರ್ಯವೂ ಕೂಡ ಇಲ್ಲಿ ಕವಿಗೆ ಸೋಜಿಗವಾಗಿ ಕಾಡಿದಂತಿದೆ. ಪ್ರಕೃತಿಯ ಅದ್ಭುತ ಸೌಂದರ್ಯ ತುಂಬಿ ತುಳುಕುವ ‘ಬೆಳಗು ಜಾವ’ ಕವನ ಮುಂಜಾನೆಯ ಚೈತನ್ಯ,ಶಾಂತಿ, ಉಲ್ಲಾಸ, ಆಹ್ಲಾದಗಳನ್ನು ಚೇತೋಹಾರಿಯಾಗಿ ವ್ಯಕ್ತ ಪಡಿಸುತ್ತದೆ. ಮೂಡಲ ಮನೆಯ ತೆರೆದ ಬಾಗಿಲಿನಿಂದ  ಹರಿದ ಹೊಂಬೆಳಕು ಜಗವನ್ನೆಲ್ಲಾ ಬೆಳಗಿರುವ ಇಲ್ಲಿನ ಕಲ್ಪನೆ ರಮೋಜ್ವಲವಾದುದು. ನಮ್ಮ ದ. ರಾ. ಬೇಂದ್ರೆಯವರು ಅಲೆ ಅಲೆಯಾಗಿ ಹೊಮ್ಮುವ ಪ್ರಕೃತಿ ಸೌಂದರ್ಯದ ಸಾಗರದೊಳಕ್ಕೆ ಮುಳುಗಿ ರಸಾನುಭವವನ್ನು ಪಡೆದಿದ್ದಾರೆ. ಅವರಿಗೆ ಈ ಒಂದು ಅನುಭವ ಕೇವಲ ಐಂದ್ರಿಕವಾಗಿರದೆ ಅಧ್ಯಾತ್ಮದ ಔನತ್ಯಕ್ಕೇರುವ  ಸ್ವರ್ಣ ಸೋಪಾನವೂ ಆಗಿದೆ ಎನ್ನಬಹುದು. ಬೆಳಗು ಜಾವ ಆನಂದಮಯವೆಂದೂ,  ಇದು ಪ್ರಕೃತಿ ನಮಗೆ ನೀಡಿದ ವರವೆಂದೂ ತಿಳಿದು ಆನಂದಿಸಿದ ಕವಿಗೆ ಅದರ ಇನ್ನೊಂದು ಮಗ್ಗಲು ತಿಳಿದಿತ್ತು. ಪ್ರಕೃತಿಯ ವರವಾದ ಬೆಳಗು ಜಾವದಲ್ಲಿ ಸೌಂದರ್ಯವಿರುವಂತೆ ಯೌವನಿಗರ ಬದುಕಿಗೆ ಅದಮ್ಯ ಚೈತನ್ಯವನ್ನು ತುಂಬುವ ಅಪಾರ ಶಕ್ತಿಯೂ ಕೂಡಾ ಇರುವುದು ಕವಿಗೆ ಕಾಣಿಸದೇ ಹೋಗಿಲ್ಲ. ಹಾಗಾಗಿಯೇ ಕವಿ ಅದನ್ನು ಗುರುತಿಸಿ ತನ್ನ ಕಾವ್ಯದಲ್ಲಿ ಚಿತ್ರಿಸಿದ್ದಾನೆ: ನಿಶೆಯಿಳಿದ ಉಷೆಯ, ಎಳನಗೆಯ ಬಗೆಗೆ, ಸೋತಿರಲು ಜಗವು ಸವಿಗೆ ಕಣ್ಣಿದಿರು ಒಂದು, ಕಟ್ಟಿತ್ತು ಕನಸು; ಕೂಗೊಂದು ಬಂತು ಕಿವಿಗೆ. ಮಕ್ಕಳಿರ ಕೇಳಿ, ರಸಕುಡಿಯಲೇಳಿ, ಹುಸಿನಿದ್ದೆಗಿದ್ದೆ ಸಾಕು ಈ ತುಂಬಿಬಾಳು, ತುಂಬಿರುವ ತನಕ, ತುಂತುಂಬಿ ಕುಡಿಯಬೇಕು. ತಮ್ಮ ಮೂರನೆಯ ಚೌಪದಿಯಲ್ಲಿ ಕವಿ ಇಂದಿನ ಯುವ ಪೀಳಿಗೆಗೆ, ತಮ್ಮ ಯೌವನದ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡಿಕೊಳ್ಳದಿರಲಿ ಎಂದು ಎಚ್ಚರಿಕೆಯ ಗಂಟೆಯನ್ನು ಬಾರಿಸಿದಂತಿದೆ. ಜೀವನವೆಂಬ ನದಿಗೆ ಪ್ರವಾಹ ಬರಬಹುದು ಎಂದಿದ್ದಾರೆ ಅಂದರೆ ಯಾವಾಗ ಬೇಕಾದರೂ ಸಾವು ಪ್ರವಾಹದ ರೀತಿಯಲ್ಲಿ ಬಂದು ನಮ್ಮನ್ನು  ಎಳೆದೊಯ್ಯಬಹುದು. ಮರಣ ಬಂದ ಮೇಲೆ ಬದುಕಲು ಅವಕಾಶವಂತು ಇಲ್ಲವೇ ಇಲ್ಲ ಎಂದಾದ ಮೇಲೆ ಬದುಕಿರುವಾಗಲೇ ಯೌವನವನ್ನು ಸಾರ್ಥಕ ಪಡಿಸಿಕೊಳ್ಳಲು ದುಡಿಮೆಯಲ್ಲಿ ತೊಡುಗುವುದು ಉತ್ತಮವಲ್ಲವೇ? ಎಂದು ಹೇಳುವ ಮೂಲಕ ಇಂದಿನ ಎಷ್ಟೋ ಕರ್ತವ್ಯ ರಹಿತ ಯುವಕರನ್ನು ಸರಿ ದಾರಿಗೆ ತರುವ ಪ್ರಯತ್ನವನ್ನು ಕವಿ ತಮ್ಮ ಕವಿತೆಯ ಮೂಲಕವೇ ಮಾಡಿದ್ದಾರೆ. ಹಾಗೆಯೇ ಕವಿ ವಸ್ತುವಿನ ಪೂರ್ತಿ ತಿರುಳನ್ನು ತಮ್ಮ ಕೊನೆಯ ಎರಡು ಚರಣಗಳಲ್ಲಿ ಈ ರೀತಿ ಚಿತ್ರಿಸಿದ್ದಾರೆ : ಬಾನ್ ಹೊಗರಲುಂಟು, ಮರ ಚಿಗುರಲುಂಟು, ಬರಲುಂಟೆ ಸುಗ್ಗಿ ಮತ್ತೆ? ಮುಳುಗಿರಲಿ ಮುಪ್ಪು ಚಿಂತನದಿ, ತಾನು ಹರಯಕ್ಕೆ ಬೇರೆ ಹೊತ್ತೇ? ಆಕಾಶದಲ್ಲಿ ಒಮ್ಮೆ ಮೋಡ ಕವಿದು ಮಬ್ಬು ಆವರಿಸಿದ್ದರು ಕೂಡ ಮೋಡ ಸರಿದ ಮೇಲೆ ಮತ್ತೆ ಪ್ರಕಾಶಿಸಬಹುದು, ಒಂದು ಋತುವಿನಲ್ಲಿ ತನ್ನ ಪೂರ್ತಿ ಎಲೆಯನ್ನು ಉದುರಿಸಿ ಒಣಗಿದ ಮರ ಕೂಡ ಪುನಃ ಮತ್ತೆ ವಸಂತ ಋತುವಿನಲ್ಲಿ ಚಿಗುರಬಹುದು ಆದರೆ ಮನುಷ್ಯನ ಯೌವನದ ಕಾಲ ಕಳೆದು ಹೋದರೆ ಎಂದಿಗೂ ಹಿಂದಿರುಗಿ ಬರಲಾರದು ಆದ್ದರಿಂದ ಮುಪ್ಪು ಬಂದು ಆವರಿಸುವ ಚಿಂತೆ ಇರಲಿ ಹಾಗೆಯೇ ಯೌವನವು ಇನ್ನೊಮ್ಮೆ ಸಿಗುವುದಿಲ್ಲವೆಂಬ ಎಚ್ಚರವಿರಲಿ. ಈಗ ಹರೆಯ ಇರುವುದರಿಂದ ಎಲ್ಲ ಚಿಂತೆಯನ್ನು ಬದಿಗೊತ್ತಿ ದುಡಿಯಲು ಮುಂದಾಗಿ, ಯೌವನದ ಸಾರ್ಥಕತೆಯನ್ನು ಅನುಭವಿಸಿ ಎಂದು ಕರೆ ನೀಡಿದ್ದಾರೆ. ಈ ಕವಿತೆ ಇಂಗ್ಲಿಷಿನ ಸಾನೆಟ್ ಪ್ರಕಾರಕ್ಕೆ ಸಂವಾದಿಯಾಗಿ ಬಂದ ಸುನೀತ ಪ್ರಕಾರದಲ್ಲಿದ್ದು ಷೇಕ್ಸ್‌ಪಿರಿಯನ್ ಮಾದರಿಯಲ್ಲಿದೆ. ಈ ಮಾದರಿಯ ಸುನೀತಗಳಲ್ಲಿ ಹನ್ನೆರಡು ಚರಣಗಳು ಮೂರು ಚೌಪದಿಗಳಿಂದ ಕೂಡಿದ್ದು ಕೊನೆಯ ಎರಡು ಚರಣಗಳು ದ್ವಿಪದಿಯ ರೂಪದಲ್ಲಿವೆ. ಹಾಗೆಯೇ ಚೌಪದಿಯ ಮೊದಲ ಎರಡು ಸಾಲುಗಳು ಒಂದು ಪ್ರಾಸದಿಂದ ಕೂಡಿದ್ದರೆ ಕೊನೆಯ ಎರಡು ಸಾಲುಗಳು ಇನ್ನೊಂದು ಪ್ರಾಸವನ್ನು ಹೊಂದಿರುತ್ತವೆ. ಕಡೆಯ ದ್ವಿಪದಿ ಒಂದೇ ಪ್ರಾಸದಲ್ಲಿ ಮುಕ್ತಾಯವಾಗುತ್ತದೆ. ಈ ಪ್ರಾಸ ವಿನ್ಯಾಸದಲ್ಲಿ ರಚನೆಯಾದ ವಿಶಿಷ್ಟ ಕವನವಿದು. ಈ ಕವಿತೆ ಯುವ ಪೀಳಿಗೆಗೆ ಎಚ್ಚರಿಸಲು ಹೇಳಿ ಮಾಡಿಸಿದ ಕವಿತೆಯಂತಿದೆ ಯಾಕೆ ಕೇಳಿದರೆ ಇಂದಿನ ಯುವ ಪೀಳಿಗೆ ಆಧುನಿಕತೆ,ವಿಜ್ಞಾನದ ಅತಿಯಾದ ಮುಂದುವರಿಕೆ,ನಾನಾ ಹೊಸ ಶೈಲಿಯ ಕಲಿಕಾ ಕ್ರಮದಲ್ಲಿ ಮೈಮರೆತು ಹಕ್ಕಿಯಂತೆ ಕೃತಕವಾಗಿ ಹಾರಾಡಿ, ಮೀನಿನಂತೆ ಕೃತಕವಾಗಿ ಈಜಿ, ಒಂದು ಗ್ರಹದಿಂದ ಇನ್ನೊಂದು ಗ್ರಹಕ್ಕೆ ಕಾಲೂರಿ ಇನ್ನೂ ಅನೇಕಾನೇಕ ಸಾಹಸವನ್ನು ಮಾಡಿರಬಹುದು ಆದರೆ ಪ್ರಕೃತಿಯೇ ನಮಗೆ ನಿಸರ್ಗದತ್ತವಾಗಿ ನೀಡಿದ ಬೆಳಗು ಜಾವದ ಅದ್ಭುತ ಕ್ಷಣವನ್ನು ಅನುಭವಿಸುವುದರಲ್ಲಿ ಇರುವ ನೆಮ್ಮದಿ, ಸಂತೋಷ ಆಧುನಿಕತೆಯಲ್ಲಿ ಎಂದಿಗೂ ಸಿಗಲಾರದು ಹಾಗೆಯೇ ಮನುಷ್ಯನ ಬದುಕಿಗೆ ಬೇಕಾದ ಚೈತನ್ಯವನ್ನು ಸಹ ಆಧುನಿಕತೆ ಎಂದಿಗೂ ಕೊಡಲಾರದು. ಮನುಷ್ಯರೇ(ಯುವಕರೇ) ಯೌವನದ ಅವಧಿಯನ್ನು ಸರಿಯಾಗಿ ಬಳಸಿಕೊಳ್ಳಿ ಎಂದು ಅವರನ್ನು ಬಡಿದೆಬ್ಬಿಸಿ, ಬೆಳಗು ಜಾವದ ಮಹತ್ವವನ್ನು ಸಾರಿ ಹೇಳಿದ ದ. ರಾ. ಬೇಂದ್ರೆಯವರ ಈ ಕವಿತೆ ಎಂದೆಂದಿಗೂ ನನ್ನ ಅಚ್ಚುಮೆಚ್ಚು. ***************************

ನನ್ನ ಇಷ್ಟದ ಕವಿತೆ Read Post »

ಇತರೆ, ಮಕ್ಕಳ ವಿಭಾಗ

ಮಕ್ಕಳ ಕವಿತೆ

ಧೂರ್ತ ಆಮೆ ನೀ.ಶ್ರೀಶೈಲ ಹುಲ್ಲೂರು ಹಂಸವೆರಡು ಕೊಳದ ಬಳಿನೀರನರಸಿ ಬಂದವುನೀರು ಕುಡಿದು ತಣಿದ ಮೇಲೆಆಮೆ ನೋಡಿ ನಿಂದವು ಹರಟೆ ಮಲ್ಲ ಆಮೆ ತಾನೆಕೊಳದ ರಾಜನೆಂದಿತುಅದನು ಇದನು ಏನೊ ಹೇಳಿಅವುಗಳ ತಲೆ ತಿಂದಿತು ಸರಿ,ನಾವು ಬರುವೆವಿನ್ನುಮತ್ತೆ ಸಿಗುವೆವೆಂದವುಬಿಡದ ಆಮೆ ನಡೆಯ ನೋಡಿಮನದಿ ತಾವೆ ನೊಂದವು ನನಗೆ ಕೊಳದ ಸಂಗ ಸಾಕುನದಿಯಲೀಜಬೇಕುಹಾಡಿ ಜಿಗಿದು ಕುಣಿದು ತಣಿದುಜಲದಿ ತೇಲಬೇಕು ದಮ್ಮಯ್ಯ ಎನುವೆ ನಾನುಮಾಡಿ ನೀವ್ ಉಪಾಯವಏನೆ ಬಂದರೂ ಸರಿಯೆಗೆಲುವೆ ನಾ ಅಪಾಯವ ಹಂಸವೆರಡು ಬಡಿಗೆ ತಂದುಆಚೆ ಈಚೆ ಹಿಡಿದವುನಡುವೆ ಆಮೆ ಬಡಿಗೆ ಕಚ್ಚಲೆರಡು ಹಾರಿ ನಡೆದವು ತುಸು ದೂರ ಸಾಗಿದೊಡನೆಕಂಡಿತೊಂದು ಊರುಮಕ್ಕಳೆಲ್ಲ ಆಮೆ ಕಂಡುಕೂಗಿದರು ಜೋರು ಕಲ್ಲನೆಸೆದು ಗೇಲಿ ಮಾಡೆಆಮೆ ಕೋಪ ಸಿಡಿಯಿತುಬೈಯ್ಯಲೆಂದು ಬಾಯಿ ತೆರೆಯೆಕೆಳಗೆ ಬಿದ್ದು ಮಡಿಯಿತು ಹಮ್ಮು ಬಿಮ್ಮು ಬೇಡ ನಮಗೆಬೇಡ ಕೋಪ ತಾಪಮನಗಾಣಿರಿ ಮಕ್ಕಳೆಲ್ಲಅವುಗಳೆಮಗೆ ಶಾಪ ******************

ಮಕ್ಕಳ ಕವಿತೆ Read Post »

ಇತರೆ, ಪ್ರಬಂಧ

ನಾನು ಈಜು ಕಲಿತ ಪ್ರಸಂಗ:

ಪ್ರಬಂದ ನಾನು ಈಜು ಕಲಿತ ಪ್ರಸಂಗ: ಲಕ್ಷ್ಮಿನಾರಾಯಣ್ ಭಟ್ ಪಿ. ಚಿಕ್ಕಂದಿನಲ್ಲಿ ನನಗೆ ಈಜು ಕಲಿಯುವ ಉಮೇದು. ಅದಕ್ಕೆ ಮನೆಯಲ್ಲಿ ಯಥಾಪ್ರಕಾರ ಅಡ್ಡಿ – ‘ಮಾಣಿಗೆ ಏನಾದ್ರೂ ಹೆಚ್ಚು-ಕಮ್ಮಿ’ (ನೇರ ಮಾತಲ್ಲಿ ‘ಗೊಟಕ್!’) ಆದರೆ ಎಂಬ ಭಯ! ಅದಕ್ಕೆ ಸರಿಯಾಗಿ ಅದೇ ಸಮಯಕ್ಕೆ ನಮ್ಮ ಮನೆ ಪಕ್ಕದ ಸುಬ್ರಾಯ ದೇವಸ್ಥಾನದ ಚಿಕ್ಕ, ಅಷ್ಟೇನೂ ಆಳವಿಲ್ಲದಿದ್ದ ಕೆರೆಯಲ್ಲಿ ಈಜು ಕಲಿಯುವಾಗ ಓರಗೆಯ ಹುಡುಗನೊಬ್ಬ ಮುಳುಗಿ ಪ್ರಾಣಬಿಟ್ಟಿದ್ದ. ಅವನು ಮುಳುಗುವುದನ್ನು ನೋಡಿ ಉಳಿದ ಚಿಳ್ಳೆಪಿಳ್ಳೆಗಳೆಲ್ಲಾ ಹೆದರಿ ಪದ್ರಾಡ್! ( ತುಳು ಭಾಷೆಯಲ್ಲಿ ‘ಪದ್ರಾಡ್’ ಅಂದರೆ ‘ಸದ್ದಿಲ್ಲದೆ ತಪ್ಪಿಸಿಕೊಂಡು ಓಡಿಹೋಗುವುದು’ ಎಂದು ಅರ್ಥ; ಅಲ್ಲದೇ ಅದು ಅಂಕೆ 12 ರ ಸಂಖ್ಯಾವಾಚಕ ಶಬ್ದವೂ ಹೌದು). ಹಿರಿಯರಿಗೆ ತಿಳಿಸಲೂ ಭಯ. ಆ ವಯಸ್ಸೇ ಅಂತಹ ಹುಚ್ಚಾಟದ್ದು. ಹೀಗಾಗಿ ನನಗೆ ಈಜು ಕಲಿಯಲು ಹಸಿರು ನಿಶಾನೆ ಸಿಗುವ ಸಂಭವವೇ ಇರಲಿಲ್ಲ. ನಮ್ಮ ಊರಿನ ಕೋಟಿಕೆರೆ ಬಹು ದೊಡ್ಡದು. ಮನೆಯಿಂದ ಒಂದು ಕಿ.ಮಿ. ದೂರದಲ್ಲಿ ಹಸಿರು ಗದ್ದೆಗಳ ನಡುವೆ ವಿಸ್ತಾರವಾಗಿ ಹರಡಿತ್ತು. ಆ ಕೆರೆ ವಿಶ್ವವಿಖ್ಯಾತ — ಆ ಕಾಲಕ್ಕೆ ‘ನಮ್ಮ ಊರೇ ನಮ್ಮ ವಿಶ್ವ, ಸರ್ವಸ್ವ’ — ಆಗಿದ್ದರೂ ಮೊತ್ತಮೊದಲ ಬಾರಿಗೆ ನಮ್ಮ ಊರಿನವರೇ ಆದ ಪರಮೇಶ್ವರ ಹೊಳ್ಳರನ್ನು ನ್ಯಾಶನಲ್ ಚಾಂಪಿಯನ್ ಮಟ್ಟದವರೆಗೆ ತರಬೇತುಗೊಳಿಸಿದ ಮಹಾನ್ ಕೆರೆ ಎಂಬಭಿದಾನದಿಂದ ಕಂಗೊಳಿಸುತ್ತಿರ್ಪ ಒಂದು ಶುಭಮುಹೂರ್ತದಲ್ಲಿ ನನ್ನ ಪಾಲಿಗೂ ಅದು ಅನುಕೂಲವಾಗಿಯೇ ಒದಗಿ ಬಂತು. ಅದೇ ಪರಮೇಶ್ವರ ಹೊಳ್ಳರನ್ನು ತಯಾರು ಮಾಡಿದ ನಮ್ಮ ಹೈಸ್ಕೂಲಿನ ವ್ಯಾಯಾಮ ಶಿಕ್ಷಕರಾಗಿದ್ದ ಶ್ರೀ ಸುಬ್ರಾಯ ಶೆಟ್ಟಿಗಾರ್ ನನಗೂ ಈಜು-ಗುರುಗಳು. ಆದರೆ ಮನೆಯಲ್ಲಿ ಗೊತ್ತಾಗದಂತೆ ಈಜು ಕಲಿಯುವುದು ಹೇಗೆ? ಮನೆಯಿಂದ ಹೆಚ್ಚುವರಿ ಬಟ್ಟೆ ತರುವಂತೆಯೂ ಇಲ್ಲ. ಅದಕ್ಕಿದ್ದದ್ದೊಂದೇ ಪರಿಹಾರ. ಹಾಕಿದ್ದ ಅಂಗಿ ಚಡ್ದಿಯನ್ನೇ ಪುನರ್ಬಳಕೆ ಮಾಡುವುದು – ಮೈ, ತಲೆ ಒಣಗಿದ ಬಳಿಕ! ಆ ಕೋಟಿಕೆರೆ ಎಂದರೆ ಸಾಮಾನ್ಯವೇನಲ್ಲ. ಅದರ ಸುತ್ತಲೂ ಹಲವು ಮನೆಗಳೂ ಇದ್ದುವು. ಹಳ್ಳಿಮನೆ ಎಂದ ಮೇಲೆ ಜನರಿಗಿಂತ ಹೆಚ್ಚು ಜಾನುವಾರುಗಳೂ – ಹಸು, ಎಮ್ಮೆ, ಕೋಳಿ, ನಾಯಿ, ಬೆಕ್ಕು ಇವೆಲ್ಲ ಸೇರಿ ಒಂದು ಪ್ರಪಂಚ – ಇದ್ದುವು. ಅವುಗಳಿಗೂ ಜಳಕವಾಗಬೇಕಲ್ಲ. ಕೋಟಿಕೆರೆಯ ಒಂದು ತುದಿಯಲ್ಲಿ ದನಗಳೂ, ಹೆಚ್ಚಾಗಿ ಎಮ್ಮೆಗಳೂ ಅಲ್ಲಿ ಜಲವಿಹಾರದಲ್ಲೋ ಜಲಕೇಳಿಯಲ್ಲೋ – ಹಾಲುಕರೆಯುವ ಸಮಯವೊಂದನ್ನು ಬಿಟ್ಟು – ಸದಾ ತೊಡಗಿರುತ್ತಿದ್ದವು. ಜೊತೆಗೆ ಹಳ್ಳಿಯ ಹೆಣ್ಣುಮಕ್ಕಳ ಬಟ್ಟೆಬರೆ ತೊಳೆಯುವ ಕೆಲಸ, ಮೈ…(!) ತೊಳೆಯುವ ಕೆಲಸ – ಮರೆಯಲ್ಲಿ ‘ಸ್ನಾನ’ ಎಂಬುದು ಎಲ್ಲೋ ಕೆಲವರಿಗಷ್ಟೇ ಲಭ್ಯವಿದ್ದ ಘನಕಾರ್ಯ; ಹಾಗೆಯೇ ಮುಸುರೆಪಾತ್ರೆಗೆ ಬೂದಿ ಬಳಿದು ಶುದ್ಧೀಕರಿಸುವ ಕೆಲಸ, ಸ್ವಲ್ಪ ಮಟ್ಟಿಗೆ ಕೃಷಿಗಾರಿಕೆಗೂ – ಹೀಗೆ ಹಲವು ಹನ್ನೊಂದು ಕೆಲಸಗಳಿಗೆ ಈ ಕೋಟಿಕೆರೆಯೇ ಆಧಾರ. ಇವೆಲ್ಲದರ ಜೊತೆಗೆ ಕೋಟಿಕೆರೆಯ ಇನ್ನೊಂದು ತುದಿ ಈಜುವುದಕ್ಕೆ ಮೀಸಲು. ಹೀಗೆ ಕ್ಷೇತ್ರ ವಿಂಗಡಣೆಯ ವಿಷಯ ಸರ್ವರಿಗೂ ತಿಳಿದಿದ್ದ ಕಾರಣದಿಂದ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅವರವರ ಕೆಲಸ-ಕಾರ್ಯಗಳು ಅದರದರ ಪಾಡಿಗೆ ಸ್ವಯಂಚಾಲಿತ ಕ್ರಿಯೆಯಂತೆ ನಡೆದುಕೊಂಡು ಹೋಗುತ್ತಿತ್ತು. ಯಾರೂ ತಮ್ಮ ತಮ್ಮ ಕ್ಷೇತ್ರ ವ್ಯಾಪ್ತಿಯನ್ನು ಮೀರುವಂತಿಲ್ಲದ ಒಂದು ಅಲಿಖಿತ ನಿಯಮ ಜಾರಿಯಲ್ಲಿತ್ತು ಮತ್ತು ಇದು ಎಲ್ಲರಿಗೂ ತಿಳಿದಿದ್ದ ಗುಟ್ಟು. ಈಜು ಕಲಿಯುವ ಪ್ರಾಥಮಿಕ ಪಾಠ ಕೆರೆದಂಡೆಯ ಕಲ್ಲುಗಳನ್ನು ಆಧಾರಕ್ಕೆ ಹಿಡಿದುಕೊಂಡು ಕೈ ಕಾಲು ಬಡಿಯುವುದು. ಆಗ ಈಜಿನಲ್ಲಿ ಪರಿಣತಿ ಹೊಂದಿದ್ದ ಇತರ ಗೆಳೆಯರು ಸುಬ್ರಾಯ ಶೆಟ್ಟಿಗಾರ್ ಅವರ ಸುಪರ್ದಿನಲ್ಲಿ ಪ್ರಾಕ್ಟೀಸ್ ಮಾಡುತ್ತಿದ್ದರು ಮತ್ತು ಶೆಟ್ಟಿಗಾರ್ ಮಾಸ್ತರ್ ತಮ್ಮ ಸ್ಟಾಪ್-ವಾಚ್ ಹಿಡಿದು ಟೈಮ್ ನೋಡುತ್ತಿದ್ದರು. ನನಗೋ ಇದನ್ನು ನೋಡಿ ಒಂಥರಾ ಹೊಟ್ಟೆಯುರಿ. ನಾನು ಅವರಂತೆ ಈಜುವುದು ಯಾವಾಗ? ಶೆಟ್ಟಿಗಾರ್ ಮಾಸ್ಟರ್ ಅವರ ಹೆಚ್ಚಿನ ಗಮನ ಆ ವಿದ್ಯಾರ್ಥಿಗಳ ಮೇಲೆ. ನನಗೆ ನನ್ನ ಮೇಲೂ, ನನ್ನಂತೆ ಕೈ ಕಾಲು ಬಡಿಯುತ್ತಿದ್ದ ಇನ್ನಿತರ ಬಾಲಪಾಠದ ವಿದ್ಯಾರ್ಥಿಗಳ ಮೇಲೂ ಒಂದು ಥರಾ ಅಸಹನೆ ಮೂಡುತ್ತಿತ್ತು. ಆದರೆ ವಿಧಿಯಿಲ್ಲ. ಬಹುಶಃ ಮಾಸ್ತರಿಗೆ ಇದು ಗೊತ್ತಾಯಿತೇನೋ ‘ಇರಿ ಮಾಡುತ್ತೇನೆ’ ಎಂದು ಎರಡನೆ ಬಾಲಪಾಠ –- ಲೆಸನ್ ನಂಬರ್ ೨ – ಶುರು ಮಾಡಿದರು: ಹಾಗೆಯೇ ಕೈಕಾಲು ಬಡಿಯುತ್ತಾ ಅರ್ಧತಲೆಯನ್ನು ನೀರಿಗೆ ಮುಳುಗಿಸಿ ಉಸಿರು ತೆಗೆದುಕೊಳ್ಳಲು ಮಾತ್ರ ಮುಖ ಒಂದು ಬದಿಗೆ ವಾಲಿಸಿ ಉಸಿರೆಳೆದುಕೊಂಡು ತಕ್ಷಣ ಮತ್ತೆ ಅರ್ಧತಲೆ ಮುಳುಗಿಸಿ ಇನ್ನೊಂದು ದಿಕ್ಕಿಗೆ ತಲೆ ವಾಲಿಸಿ ಉಸಿರೆಳೆದುಕೊಳ್ಳುವುದು. ಆಗ ಕೈಕಾಲು ಬಡಿಯುವುದನ್ನು ನಿಲ್ಲಿಸುವಂತಿಲ್ಲ! ಇದನ್ನು ಒಂದೆರಡು ಬಾರಿ ಮಾಡುವಷ್ಟರಲ್ಲಿ ನಾನು ಸಾಕಷ್ಟು ನೀರು ಕುಡಿದದ್ದಾಯಿತು, ಅಲ್ಲದೆ ತಲೆ ಮುಳುಗಿಸುವಾಗ ಕೈಕಾಲು ಬಡಿಯುವುದು ನಿಲ್ಲುತ್ತಿತ್ತು; ಕೈಕಾಲು ಬಡಿಯುತ್ತಿದ್ದರೆ ತಲೆ ಮುಳುಗುತ್ತಿರಲಿಲ್ಲ.ಒಳ್ಳೇ ಪೇಚಾಟಕ್ಕೆ ಬಂತು. ಆದರೇನು ಮಾಡುವುದು? ಬೇರೆ ವಿಧಿಯಿಲ್ಲ. ಇದನ್ನು ಆದಷ್ಟು ಬೇಗನೆ ಕಲಿಯದಿದ್ದರೆ ಈಜಲು ಸಾಧ್ಯವಿಲ್ಲ ಎಂಬ ಜ್ಞಾನೋದಯವಾಗಿ ತಕ್ಕ ಮಟ್ಟಿಗೆ ಅಭ್ಯಾಸ ಮಾಡಿದ ಮೇಲೆ ಮಾಸ್ತರಿಗೆ ದುಂಬಾಲು ಬಿದ್ದು ಮುಂದಿನ ಪಾಠ ಹೇಳಿ ಕೊಡಿ ಅಂತ ಅವರನ್ನು ಪೀಡಿಸಿದೆ. ಮೊದಲಿನಿಂದಲೂ ನನಗೆ ತಾಳ್ಮೆ ಸ್ವಲ್ಪ ಕಡಿಮೆಯೇ. ಎಲ್ಲವೂ ಬೇಗ ಬೇಗ ಆಗಬೇಕು. ಆಗೆಲ್ಲಾ ‘ಏನು ಆರು ತಿಂಗಳಿಗೆ ಹುಟ್ಟಿದ ಹಾಗೆ ಮಾಡುತ್ತಿ?’ ಎನ್ನುವ ವಾಡಿಕೆಯ ಚುಚ್ಚುಮಾತು ನನ್ನೆದೆಗೆ ಚುಚ್ಚಿದರೂ ನಾನದನ್ನು ‘ಡೋಂಟ್ ಕೇರ್’ ಮಾಡುತ್ತಿದ್ದೆ! ಸರಿ ಮುಂದಿನ ಪಾಠ: ಎರಡು ಪೊಟ್ಟು ತೆಂಗಿನಕಾಯಿಗಳನ್ನು ಒಟ್ಟಿಗೆ ಚಿಕ್ಕ ಹಗ್ಗದ ಸಹಾಯದಿಂದ ಜೋಡಿಸಿ ಹೊಟ್ಟೆಗೆ ಆಧಾರವಾಗಿಟ್ಟುಕೊಂಡು (ಇವು ನಮ್ಮನ್ನು ನೀರಲ್ಲಿ ಮುಳುಗದಂತೆ ತಡೆಯುತ್ತವೆ ಮತ್ತು ಇದು ಈಜು ಕಲಿಯಲು ಎಲ್ಲರೂ ಬಳಸುತ್ತಿದ್ದ ಅತೀ ಸಾಮಾನ್ಯ ಸಾಧನ, ಅದಿಲ್ಲದಿದ್ದರೆ ಉದ್ದದ ಬಾಳೆದಿಂಡೂ ಇದೆ ರೀತಿ ಆಸರೆಯಾಗುತ್ತಿತ್ತು.) ಕಡಿಮೆ ಆಳದ ನೀರಿನಲ್ಲಿ ಈಜುವ ಅಭ್ಯಾಸ ಮಾಡುವುದು. ಆಗ ಚೆನ್ನಾಗಿ ಈಜು ಗೊತ್ತಿದ್ದ ಇತರ ಮಕ್ಕಳು ನಮ್ಮ ಸುತ್ತ ಈಜುತ್ತಾ ಹುರಿದುಂಬಿಸುತ್ತಿದ್ದರು. ಕೆಲವೊಮ್ಮೆ ನಮಗೆ ಅರಿವೇ ಆಗದಂತೆ ಈ ಪೊಟ್ಟು ತೆಂಗಿನಕಾಯಿಗಳನ್ನು ತಪ್ಪಿಸಿ ನಾವು ಈಜುವಂತೆ ಮಾಡುತ್ತಿದ್ದರು. ಆದರೆ ಈ ಆಸರೆ ತಪ್ಪಿದೆ ಎಂದು ತಿಳಿದ ತಕ್ಷಣ ಕೈಕಾಲು ಬಡಿಯುವುದು ನಿಂತು ಮುಳುಗುವ ಭಯದಲ್ಲಿ ಇನ್ನಷ್ಟು ನೀರು ಕುಡಿದು ದಡದ ಕಡೆಗೆ ಈಜುವುದಲ್ಲ, ಹಾರುವುದು ಎಂದರೂ ಸರಿಯೇ – ಆಗುತ್ತಿತ್ತು. ಹೀಗೆ ನಿಧಾನವಾಗಿ ಈಜುವುದು ಅಭ್ಯಾಸವಾಯಿತು. ಆಮೇಲೆ ಕೇಳಲುಂಟೇ! ‘ಭಳಿರೇ ಪರಾಕ್ರಮ ಕಂಥೀರವ’ ಎಂದು ‘ಡೈವ್’ ಮಾಡುವುದರಿಂದ ಹಿಡಿದು ಫ್ರೀ-ಸ್ಟೈಲ್, ಬ್ಯಾಕ್ ಸ್ಟ್ರೋಕ್ ಇತ್ಯಾದಿಗಳಲ್ಲಿ ಪಳಗಿದ್ದುಂಟು. ಆದರೆ ಇದನ್ನು ಸ್ಪರ್ಧೆಯ ಮಟ್ಟಕ್ಕೆ ಮುಂದುವರಿಸುವುದಕ್ಕಾಗಲಿಲ್ಲ. ಇದರಿಂದ ಊರೇನೂ ಮುಳುಗಿಹೋಗಿಲ್ಲ ಅಥವಾ ದೊಡ್ಡ ನಷ್ಟ ಯಾರಿಗೂ ಏನೂ ಇಲ್ಲ. ಇರಲಿ ಬಿಡಿ. ನನ್ನ ಜೊತೆ ಈಜಿಗೆ ಸಾಥ್ ಕೊಡುತ್ತಿದ್ದ ಒಬ್ಬ ಸಹಪಾಠಿ ಶೇಕ್ ಹಸನ್ ಸಾಹೇಬ್. ಹೀಗೆ ಹೇಳಿದರೆ ಹೆಚ್ಚಿನವರಿಗೆ ತಿಳಿಯಲಾರದು. ‘ವಿಟ್ಲ ಹಸನ್’ ಎಂದರೆ ಎಲ್ಲರಿಗೂ ತಿಳಿಯುತ್ತದೆ. ನಾನು ಅವನ ಮನೆಗೆ, ಅವನು ನಮ್ಮ ಮನೆಗೆ ಬಂದು ಹೋಗುವುದು ಮಾಮೂಲಾಗಿತ್ತು. ಅವನ ತಾಯಿ ನನ್ನನ್ನು ತುಂಬಾ ಪ್ರೀತಿಯಿಂದ ಮಾತನಾಡಿಸುತ್ತಿದ್ದರು. ಆ ಕಾಲದಲ್ಲಿ ನಮ್ಮಿಬ್ಬರಿಗೂ ಬಡತನ ಹಾಸಿ ಹೊದೆಯುವಷ್ಟು ಇದ್ದರೂ ಪರಸ್ಪರ ಪ್ರೀತಿ, ವಿಶ್ವಾಸಗಳು ಸಾಮಾಜಿಕ ಕಟ್ಟುಪಾಡುಗಳನ್ನು ಮೀರಿ ನಿಂತದ್ದು ಒಂದು ಸುಖಾನುಭವ. ಜೊತೆಗೆ ಹಸನ್ ಕೂಡಾ ನನ್ನೊಂದಿಗೆ ನಾಟಕಗಳಲ್ಲಿ ಬಣ್ಣ ಹಚ್ಚುತ್ತಿದ್ದ. ನಾವು ರಿಹರ್ಸಲ್-ಗೂ ಜೊತೆಯಲ್ಲೇ ಹೋಗುತ್ತಿದ್ದೆವು. ನಾವು ಹತ್ತನೇ ತರಗತಿಯಲ್ಲಿರುವಾಗ ಶಾಲಾ ವಾರ್ಷಿಕೋತ್ಸವದ ಸಂದರ್ಭದಲ್ಲಿ (ಆಗೆಲ್ಲಾ ರಾತ್ರಿಪೂರ್ತಿ ಬೆಳಗಾಗುವ ತನಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದವು. ರಾತ್ರಿ ಎರಡರ ಬಳಿಕ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ ಹೀಗೆ ನಡೆಯುತ್ತಿತ್ತು. ಹಳ್ಳಿಯ ಜನರು ಇದಕ್ಕೆ ತಯಾರಾಗಿಯೇ ಬರುತ್ತಿದ್ದರು.) ನಮ್ಮ ಮಾಸ್ತರ್ ಮಹಾಬಲ ರೈ ಅವರು ಬರೆದು ನಿರ್ದೇಶಿಸಿದ ತುಳು ನಾಟಕ ‘ಲಾಟ್ರಿ ಲಕ್ಕಪ್ಪೆ ದಿವಾಳಿ ದೂಮಪ್ಪೆ’ ದಲ್ಲಿ ನನ್ನದು ಲಕ್ಕಪ್ಪನ ಪಾತ್ರ. ದೂಮಪ್ಪನ ಪಾತ್ರ ಬಹುಶಃ ಹಸನ್ ಮಾಡಿದ್ದ ಅಂತ ನೆನಪು. ಇರಲಿ, ತಿರುಗಿ ಮತ್ತೆ ನನ್ನ ಈಜು ಪುರಾಣಕ್ಕೆ ಬರೋಣ. ನಾನು ಕೆಲವೊಮ್ಮೆ ಬೆಳ್ಳಂ ಬೆಳಗ್ಗೆ 5 ಗಂಟೆಗೆ ಹಸನ್ ಮನೆಗೆ ಬಂದು (ನಮ್ಮ ಮನೆಯಲ್ಲಿ ಏನೋ ಒಂದು ಸುಳ್ಳು ಹೇಳಿ; ಏನದು ಸುಳ್ಳು ಸಬೂಬು ಈಗ ನೆನಪಾಗುತ್ತಿಲ್ಲ) ಇನ್ನೂ ಮಲಗಿಯೇ ಇರುತ್ತಿದ್ದವನನ್ನು ಎಬ್ಬಿಸಿ, ಬಳಿಕ ಕಾರಿನ ಹಳೆ ಟ್ಯೂಬ್ (ಅದು ಅವನ ಮಾವನ ಕಾರಿನದ್ದು) ಹಿಡ್ಕೊಂಡು ನಿದ್ದೆಗಣ್ಣಿನಲ್ಲಿ ಒಂದು ಕಿಲೋ ಮೀಟರ್ ನಡ್ಕೊಂಡು ಹೋಗಿ ಈಜು ಕ್ಲಾಸಿಗೆ ಮೊದಲು ಹಾಜರು ಹಾಕುತ್ತಿದ್ದೆವು. ಪೊಟ್ಟು ತೆಂಗಿನ ಕಾಯಿ, ಬಾಳೆದಿಂಡುಗಳಿಂದ ಮೇಲ್-ಬಡ್ತಿ ಕಾರಿನ ಹಳೆ ಟ್ಯೂಬ್. ಇದರ ಮಧ್ಯದಲ್ಲಿ ಕೂತರೆ ಯಾವ ಭಯ, ಸುಸ್ತು ಇಲ್ಲದೆ ಬೇಕಾದಷ್ಟು ಹೊತ್ತು ನೀರಿನಲ್ಲಿ ಖುಷಿ ಬಂದಂತೆ ವಿಹರಿಸಬಹುದಾಗಿತ್ತು. ಆದರೆ ನಮ್ಮ ಶೆಟ್ಟಿಗಾರ್ ಮಾಸ್ತರಿಗೆ ಇದನ್ನು ಕಂಡರೆ ಅಷ್ಟಕ್ಕಷ್ಟೇ. ಮಕ್ಕಳು ಈಜು ಕಲಿಯುವುದು ಬಿಟ್ಟು ಜಲವಿಹಾರ ಮಾಡುತ್ತಾ ಕಾಲಕಳೆಯುತ್ತಾರೆ ಎಂದು ಅವರಿಗೆ ಅನಿಸುತ್ತಿತ್ತು. ಮತ್ತು ಅದು ಸತ್ಯವೂ ಆಗಿತ್ತು.ಅಜಿತ್ ಕುಮಾರ್ ರೈ ಕೂಡಾ ಈ ಈಜು ಕ್ಲಾಸಿನ ಸದಸ್ಯನೇ. ಇವರಿಬ್ಬರು ಮತ್ತು ಗಣಪತಿ ಭಟ್ (ಉಳಿದವರ ಹೆಸರು ನೆನಪಾಗುತ್ತಿಲ್ಲ) ಮೈಸೂರು ದಸರಾ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಟ್ರೋಫಿ ಹಿಡಿದು ಮೆರೆದ ಘಟನೆ ಒಂದು ರೋಚಕ ಕಥೆ. ಈ ಕೋಟಿಕೆರೆಗೆ ಬರಬೇಕಾದರೆ ನನಗೆ ಎರಡು ದಾರಿಗಳಿದ್ದವು. ಒಂದು ಜಟಾಧಾರಿ ಕೆರೆದಂಡೆ ಮೇಲೆ ಸಾಗಿ ಸದಾ ನೀರು ಹರಿಯುವ ಒಂದು ಸಣ್ಣ ತೋಡಿನಲ್ಲಿ ಸ್ವಲ್ಪ ದೂರ ನಡೆದು ದಾಟಿ ಬರುವುದು – ಇದು ಮಳೆಗಾಲದಲ್ಲಿ ಸಾಧ್ಯವಿಲ್ಲದ ಮಾತು – ಮಳೆ ಬರುತ್ತಿದ್ದ ದಿನಗಳಲ್ಲೂ ಎಷ್ಟೋ ಬಾರಿ ನಾನು ಈಜು ಹೊಡೆಯುತ್ತಿದ್ದೆ. ಆಗೆಲ್ಲಾ ಸಾಮಾನ್ಯವಾಗಿ ನಾನು ಒಂಟಿಯೇ. ಇನ್ನೊಂದು ದಾರಿ ನಮ್ಮ ಹೈಸ್ಕೂಲ್ ಬದಿಯಿಂದ ಗದ್ದೆಗಳನ್ನು ಹಾದು ನನ್ನ ಸಹಪಾಠಿ ಸುಬ್ರಹ್ಮಣ್ಯ ಹೊಳ್ಳನ (ಪರಮೇಶ್ವರ ಹೊಳ್ಳರ ಖಾಸಾ ತಮ್ಮ – ಈತ ಪ್ರಾಥಮಿಕ ಶಾಲಾ ಶಿಕ್ಷಕನಾಗಿ, ಮುಖ್ಯೋಪಾಧ್ಯಾಯನಾಗಿ ಕೆಲಸ ನಿರ್ವಹಿಸುತ್ತಿದ್ದಾಗಲೇ ದುರದೃಷ್ಟವಶಾತ್ ಬೈಕ್ ಆಕ್ಸಿಡೆಂಟ್-ನಲ್ಲಿ ತೀರಿಹೋದ) ಮನೆಗೆ ಬಂದು ಅವನೊಂದಿಗೆ ಕೋಟಿಕೆರೆಗೆ ಬರುವ ಬಳಸು ದಾರಿ. ಅವನು ನನ್ನೊಂದಿಗೆ ಬರುತ್ತಾನೆ ಎನ್ನುವ ಕಾರಣಕ್ಕೆ ನಾನು ಈ ಬಳಸು ದಾರಿಯನ್ನೇ ಹೆಚ್ಚು ನೆಚ್ಚಿದ್ದೆ. ಈಜುವಿಕೆಯಲ್ಲಿ ಸಾಧನೆ ಮಾಡಿದ ನನ್ನ ಇನ್ನೊಬ್ಬ ಸಹಪಾಠಿ ಕಾಶೀಮಟದ ಗಣಪತಿ ಭಟ್. ಇವನೊಂದಿಗೆ ತಳುಕುಹಾಕಿಕೊಂಡ ನೆನಪು ನಾನು ಏಳನೆಯ ತರಗತಿಯಲ್ಲಿ ಇದ್ದಾಗ ಜೀವಂಧರ ಮಾಷ್ಟ್ರ ನಿರ್ದೇಶನದ ‘ಕುರುಕ್ಷೇತ್ರ’ ನಾಟಕ. ಅದರಲ್ಲಿ ಗಣಪತಿಯದ್ದು ಕೌರವನ ಪಾತ್ರ, ನನ್ನದು ಬಲರಾಮನ ಪಾತ್ರ. ನಾಟಕದ ತರಬೇತಿ ಸಮಯದಲ್ಲಿ ಮಾತು ಮರೆತರೆ ಜೀವಂಧರ ಮಾಸ್ತರಿಗೆ (ನಮ್ಮ ಊರಿನ ಎರಡೋ ಮೂರೋ ಜೈನ ಮನೆಗಳಲ್ಲಿ ಇವರದೂ ಒಂದು; ಇನ್ನೊಂದು ಜೈನ ಬಸದಿಯ ಇಂದ್ರ ಅವರದು.) ಅಸಾಧ್ಯ ಸಿಟ್ಟು. ಕೌರವನ ಗದೆ, ಬಲರಾಮನ ಹಲಾಯುಧಗಳನ್ನು ನಾವು ನಮ್ಮ ನಮ್ಮ ಕೈಯಲ್ಲಿ ಇದೆ ಎಂದೇ ಭಾವಿಸಿಕೊಂಡು ರಿಹರ್ಸಲ್ ನಡೆಸುತ್ತಿದ್ದೆವು. ನಾಟಕದ ದಿನ ನನಗೆ ಸಣ್ಣಗೆ ಜ್ವರ. ಇದು ಮಾಸ್ತರಿಗೆ ಗೊತ್ತಾದರೆ ಫಜೀತಿ ಎಂದು ಸಾಧ್ಯವಾದಷ್ಟು ಉಮೇದು ತೋರಿಸುತ್ತಿದ್ದೆ. ಮೇಕಪ್ ಎಲ್ಲಾ ಮುಗಿದು ನಾಟಕ ನಡೆಯುತ್ತಿದೆ. ಆದರೆ ನನ್ನ ಹಲಾಯುಧ ಮಾತ್ರ ಕಾಣೆಯಾಗಿದೆ; ಅದನ್ನು ತಂದೇ ಇಲ್ಲವೋ ಅಥವಾ ಉಳಿದ ಪರಿಕರಗಳೆಡೆಯಲ್ಲಿ ಎಲ್ಲಿ ಮರೆಯಾಗಿತ್ತೋ

ನಾನು ಈಜು ಕಲಿತ ಪ್ರಸಂಗ: Read Post »

ಕಾವ್ಯಯಾನ

ಕಾವ್ಯಯಾನ

ಅವರು-ಇವರು ಕೆ.ಎ. ಎಂ. ಅನ್ಸಾರಿ ಮುಸ್ಸಂಜೆಯ ಹೊತ್ತುಮನೆಯತ್ತಹೆಜ್ಜೆಯಿಡಲುಮಡದಿಯಬಾಡಿದ ಮುಖ ದರ್ಶನ… ಗೊತ್ತಾ ಇವರು ಇನ್ನಿಲ್ಲವಾದರಂತೆ…ನಾನುಇನ್ನಾ ಲಿಲ್ಲಾಹ್.. ಎನ್ನುವಾಗಮೊಗದಲ್ಲಿ ನಗುವ ಕಂಡ ಅವಳು…ನಗಬಾರದೆಂದಳು… ಒಂದೆರಡು ವರುಷಗಳ ಹಿಂದೆಇವರು ಅವರನ್ನುಕೊಂದಿ ದ್ದರು..ಸಾವಿಗೆ ಸಂಭ್ರಮಿಸಬಾರದು.. ದಫನ ವಾಗಿರಬಹುದೇ..ನಾ ಕೇಳಿದ ಪ್ರಶ್ನೆ..ಹೌದು. ಈಗ ಮುಗಿದಿರಬಹುದೆನುವಉತ್ತರ.. ಇವರು-ಅವರುಇಬ್ಬರೂ ಊರಿನವರು ..ಅದೇನೋ ಜಗಳ ತಾರಕಕ್ಕೇರಿದಾಗಇರಿತದಿಂದ ಅವರುಪರಲೋಕ ತಲುಪಿದ್ದರು..ಇಂದು ಇವರ ಸರದಿ.. ಮೆಲ್ಲನೆ ಮಸೀದಿಯತ್ತ ಹೆಜ್ಜೆ ಹಾಕಿದೆ..ಪಕ್ಕದಲೇ ಖಬರಸ್ಥಾನ.ಗುಂಪು ಕಟ್ಟಿ ನಡೆದ ಇವರುಒಬ್ಬಂಟಿ ಮಲಗಿದ್ದರು..ಹೊತ್ತೊಯ್ದವರು ಮಣ್ಣು ಮಾಡಿಮರಳಿದ್ದರು.. ಬಡ-ಸಿರಿವಂತ ರೆಲ್ಲರೂಮಲಗುವ ತಾಣವಿದು..ಇವರೀಗ ಒಬ್ಬಂಟಿ..ಸುಮ್ಮನೇ ಪಕ್ಕದಲಿ ಯಾರು ಮಲಗಿರುವುದೆಂದುಕುತೂಹಲದಿ ನೋಡಿದೆ… ಹೌದು..ಪಕ್ಕದಲಿ ಅವರ ಹೆಸರು ಕೆತ್ತಿದ ಕಲ್ಲುನಗುವಂತೆ ಕಾಣಿಸಿತು..ಅಂದಿನ ಶತ್ರುಗಳು ಇಂದುಅಕ್ಕ-ಪಕ್ಕದಲಿ ಮಲಗಿದ್ದರು ..!!! *****************************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಬರೆಯದಿರಲಾರೆ…. ನಾಗರಾಜ ಹರಪನಹಳ್ಳಿ ಅಕ್ಷರಗಳು ಆತ್ಮಹತ್ಯೆ ಮಾಡಿಕೊಂಡಿವೆಕೆಲವರಿಗೆ ಮಾರಾಟವಾಗಿವೆ ಹಸಿ ಮಾಂಸಲ ದಂಧೆಗೆಗೊತ್ತಾ ನಿನಗೆ?ಕೆಲವೆಡೆ ಫತ್ವಾ ಇದೆ ಬೆಳಕಿಗೆ ಇನ್ನೇನಾಗಬಹುದು??ಪನ್ಸಾರೆ, ಕಲಬುರ್ಗಿ, ಗೌರಿ ಕೊಂದ ನಾಡಿನಲ್ಲಿ??ಬರೆವ ಕೈಗಳ,ನಿಜದ ಮಾತಿಗೆ ಬೀಗ ಜಡಿದ ಮೇಲೆ ??ಕೊಲೆಯಾಗಿದೆ ಅಭಿವ್ಯಕ್ತಿ! ಗೊತ್ತಾ ನಿನಗೆ ??ಅಮಾಸ, ಠೊಣ್ಣಿಯರ ಹಸಿವು ಹಿಂಗಿಲ್ಲಸಾಕವ್ವ ಬದುಕಿನ ಜಂಜಾಟ ನಿಂತಿಲ್ಲ; ಹರಕು ಸೀರೆ ,ಮುರಿದ ಮನೆ ಕಟ್ಟಲಾಗಿಲ್ಲಐತ ಪೀಂಚಲು ಬದುಕ ಕಟ್ಟಲು ಅಲೆದಾಡುತ್ತಿದ್ದಾರೆಚೋಮುನ ಭೂಮಿ ಹೊಂದುವ ಕನಸು ಕನಸಾಗಿಯೇ ಇದೆ…ನಾಡದೊರೆಯ ಕಣ್ಣು ಬದಲಾಗಿಲ್ಲ ಹೀಗಿರುವಾಗ…ನನಗೆ ನಾಚಿಕೆಯಾಗುತ್ತದೆಮಳೆ ನದಿ ಕಾಡು ಬೆಟ್ಟ ಕಡಲು ದಂಡೆ ಕಾಮನಬಿಲ್ಲನ ಬಗ್ಗೆ ಕವಿತೆ ಬರೆದದ್ದಕ್ಕೆ… ಇನ್ನು ಬರೆಯದಿರಲಾರೆ ಮನುಷ್ಯರ ಸಂಚುಗಳ ಬಗ್ಗೆಆತ್ಮವಂಚನೆಗಳ ಬಗ್ಗೆಹಸಿದವರ ಬಗ್ಗೆಬರೆಯದೇ ಇರಲಾರೆ ಹಾಗೆ ಬರೆಯದೇ ನಾಮೌನಿಯಾದರೆ ; ಅಕ್ಷರಗಳ ಯಜಮಾನಿಕೆಗೆ ಒತ್ತೆ ಇಡದೆಅಕ್ಷರಗಳ ಜೊತೆ ಬದುಕುತ್ತೇನೆ‌ಇಲ್ಲವೇ …… *****************************

ಕಾವ್ಯಯಾನ Read Post »

ಕಥಾಗುಚ್ಛ

ಕಥಾಯಾನ

‘ಬಾಳ ಬಣ್ಣ’  ವಸುಂಧರಾ ಕದಲೂರು       ಕುಸುಮಳಿಗೆ ವಿವಾಹದ ಏಳು ವರ್ಷದ ಅನಂತರ ಹುಟ್ಟಿದವನೇ ‘ಅಮರಕಿಶೋರ’. ಕುಸುಮಾಳದ್ದು ಮೂವತ್ತರ ಹರಯದಲ್ಲಾದ ವಿವಾಹ.    ತಡವಾದ ವಿವಾಹ ಜೊತೆಗೆ ತಡವಾಗಿಯೇ ಮಗು ಹುಟ್ಟಿದ್ದು. ಈ ಕಾರಣಕ್ಕೋ ಏನೋ ಮಗುವನ್ನು ಐದು ವರ್ಷ ಆಗೋವರೆಗೂ ನೆಲಕ್ಕೆ ಬಿಟ್ಟರೆಎಲ್ಲಿ ನವೆದು ಹೋಗುವುದೋ ಎಂದುಕೊಂಡು ಕೆಳಕ್ಕೆ ಬಿಡದೇ ಕಂಕುಳಲ್ಲಿಟ್ಟುಕೊಂಡು ಸಾಕಿದಳು. ಕಣ್ಣನ್ನು ರೆಪ್ಪೆಗಳು ಹೇಗೆ ಮುಚ್ಚಟೆಯಿಂದ ರಕ್ಷಿಸುತ್ತವೆಯೋ ಹಾಗೆ ಮಗನನ್ನು ನೋಡಿಕೊಳ್ಳುತ್ತಿದ್ದಳು.         ಮಗುವಿಗೆ ಹಸಿವಾಗಿ ಅದು ‘ಆ…’ ಎಂದು ಬಾಯ್ಬಿಡುವ ಮೊದಲೇ ತುಪ್ಪದಲ್ಲೇ ಅನ್ನ ಕಲಸಿ ಬಾಯಿಗಿಟ್ಟು ತಿನಿಸುತ್ತಿದ್ದಳು. ಯಾವುದಾದರೂ ಆಟದ ಸಾಮಾನು ಬೇಕೆನ್ನುತ್ತಾ ಕೈಚಾಚುವ ಮೊದಲೇ ಕೊಂಡು ಅದನ್ನವನ ಕೈಗಿತ್ತು ಸಂಭ್ರಮಿಸುತ್ತಿದ್ದಳು. ಆಕೆಯ ಪ್ರೀತಿಯಲ್ಲಿ  ಶ್ರೀಮಂತಿಕೆಯ ಅದ್ದೂರಿತನ ಇಲ್ಲದಿದ್ದರೂ, ಭಾವ ತೀವ್ರತೆಯ ಆಡಂಬರಕ್ಕೇನೂ ಕೊರತೆಯಿರಲಿಲ್ಲ. ಅವಳ ವಾರಿಗೆಯಲ್ಲೇ ಹೆತ್ತವರು ತಮ್ಮ ಮಕ್ಕಳನ್ನು ಎರಡು- ಎರಡೂವರೆ ವರ್ಷಕ್ಕೇ ಮಾಂಟೆಸ್ಸರಿಗೆ ಸೇರಿಸಿದರೆ, ಈಕೆ ಮಾತ್ರ ‘ಮನೆಯೇ ಮೊದಲ ಪಾಠಶಾಲೆ’ ಎಂದು ನಂಬಿ, ‘ಅಆಇಈ’, ‘ಎಬಿಸಿಡಿ’, ‘1234’ ಗಳ ಜೊತೆಗೆ ನರ್ಸರಿ ರೈಮ್ಸ್, ದೇವರ ನಾಮ, ಶ್ಲೋಕಗಳನ್ನು ಅಮರನಿಗೆ ಕಲಿಸುತ್ತಾ, ಅವನ ತೊದಲು ಬಾಯಿಂದ ಮತ್ತೆಮತ್ತೆ ಅದನ್ನು ಹೇಳಿಸಿ, ಮುದ್ದು ಮುದ್ದು ಉಚ್ಚಾರಣೆಗಳನು ಕೇಳಿ, ಮಗನೊಡನೆ ತಾನೂ ಮತ್ತೊಂದು ಮಗುವಾಗಿ ಆಡುತ್ತಾ ಖುಷಿಪಡುತ್ತಾ ದಿನದೂಡುತ್ತಿದ್ದಳು.    ಅಮ್ಮ ಹೇಳಿಕೊಡುವ ಪಾಠಗಳನ್ನು ಕಲಿಯುವುದರಲ್ಲಿ      ಚುರುಕಾಗಿದ್ದ ಅಮರನು, ಬಣ್ಣಗಳನ್ನು ಗುರುತಿಸಲು ಮಾತ್ರ ಪರದಾಡುತ್ತಿದ್ದ. ಅವನ ಈ ಸಮಸ್ಯೆ ಅರಿವಿಗೆ ಬಂದದ್ದೂ ಸಹ, ಕುಸುಮಾಳು ಅವನಿಗೆ ಕಲರ್ಸ್ಗಳ ಕುರಿತು ಪಾಠ ಮಾಡುವಾಗ. ಕಾಮನ ಬಿಲ್ಲಿನ ಬಣ್ಣಗಳ ಚಾರ್ಟನ್ನು ಗುರುತಿಸುವಾಗ ಅಮರ ಪದೇಪದೇ ವಿಫಲನಾಗುತ್ತಿದ್ದ. ಹಸಿರು, ಕೆಂಪು, ಹಸಿರು, ಹಳದಿ ಹೀಗೆ ಕೆಲವು ಛಾಯೆಯ ಬಣ್ಣಗಳನ್ನು ಗುರುತಿಸಲು ಕಷ್ಟಪಡುತ್ತಿದ್ದ. ಪದೇ ಪದೇ ತಿದ್ದಿ ಹೇಳಿಕೊಟ್ಟರೂ ಈ ಕೆಲವು ಬಣ್ಣಗಳನ್ನು ಪ್ರತ್ಯೇಕವಾಗಿ ಗುರುತಿಸಲು ಅಸಮರ್ಥನಾಗುತ್ತಿದ್ದ.    ಅಮರನು ಪದೇ ಪದೇ ತನ್ನನ್ನು ರೇಗಿಸಲು ಬೇಕೆಂದೇ ಹೀಗೆ ತುಂಟಾಟ ಮಾಡುತ್ತಿರಬಹುದಾ..? ಎಂದು ಆರಂಭದಲ್ಲಿ ನಿರ್ಲಕ್ಷಿಸಿದ್ದ ಕುಸುಮಾ, ಅದು ಆಟವಲ್ಲ, ಆತನ ಸಮಸ್ಯೆ ಎಂದು ತಿಳಿದು ಚಿಂತೆಗೆ ಒಳಗಾದಳು.  ಸಮಸ್ಯೆ ಸ್ವರೂಪ ತಿಳಿಯುತ್ತಿದ್ದಂತೇ ನೇತ್ರತಜ್ಞರ ಬಳಿ ಮಗುವನ್ನು ಕರೆದುಕೊಂಡು ಹೋದಳು.    ಮಗುವಿನ ಕಣ್ಣುಗಳನ್ನು ಅತ್ಯಾಧುನಿಕ ಉಪಕರಣಗಳ ಮೂಲಕ ಪರೀಕ್ಷಿಸಿದ ನೇತ್ರತಜ್ಞರು ‘ನೋಡಿ ಕುಸುಮ, ನಿಮ್ಮ ಮಗು ಅಮರನಿಗೆ ‘ಬಣ್ಣಗುರುಡು’ತನ ಅಂದರೆ colour blindness ಇದೆ’ ಎಂದು ಸ್ಪಷ್ಟಪಡಿಸಿದರು. ವಿಷಯ ತಿಳಿದು ಆಘಾತಕ್ಕೊಳಗಾದ ಕುಸುಮಾ ತನ್ನ ಮುದ್ದು ಮಗುವಿನ ಬದುಕು ಹೀಗೆ ಬಣ್ಣಗೆಟ್ಟಿತೇ ಎಂದು ಶೋಕಿಸಿದಳು.       ಮನೋವ್ಯಥೆಯಿಂದ ದುಃಖಿಸುತ್ತಿದ್ದ ಕುಸುಮಾಳನ್ನು ಸಂತೈಸಿದ ವೈದ್ಯರು, ಆಕೆಗೆ ‘ಬಣ್ಣಗುರುಡುತನ’ದ ಬಗ್ಗೆ ಕೂಲಂಕಷವಾಗಿ ವಿವರಿಸಿ, ‘’ಕೆಲವರಿಗೆ ಇಂತಹ ಕೆಲವು ಅಪರೂಪದ ಅನುವಂಶೀಯ ಕಾಯಿಲೆಗಳು ಬರುತ್ತವೆ. ಹಾಗೆ ಬರುವುದು ಯಾರದ್ದೋ ಅಪರಾಧದಿಂದಲ್ಲ. ನೀವು ಯಾವ ರೀತಿಯಲ್ಲೂ ಅಧೀರರಾಗಬೇಡಿ’’ ಎಂದು ಧೈರ್ಯ ತುಂಬಿದರು. ಜೊತೆಗೆ ಒಂದಷ್ಟು ಸಲಹೆ ನೀಡಿ ಮನೆಗೆ ಕಳುಹಿಸಿಕೊಟ್ಟರು.     ಆಸ್ಪತ್ರೆಯಿಂದ ಮನೆಗೆ ಮರಳಿದ ಕುಸುಮಾಳಿಗೆ, ಸಮಾಧಾನವೇ ಆಗಲಿಲ್ಲ. ಮಕ್ಕಳಿಲ್ಲದೇ ಹಲವು ವರ್ಷ ಬಣ್ಣಗೆಟ್ಟಿದ್ದ ತನ್ನ ಬದುಕಿಗೆ ಉಲ್ಲಾಸದ ಹೊಸಬೆಳಕನ್ನು ತಂದುಕೊಟ್ಟ ತನ್ನ ಮುದ್ದುಕಂದನ ಬದುಕು ಹೀಗೆ ವರ್ಣಹೀನವಾಯಿತಲ್ಲಾ… ಎಂದು ರೋಧಿಸಿದಳು.      ವೈದ್ಯರ ಸಲಹೆಯಂತೆ, ನಾಕಾರು ದಿನಗಳಾದ ಮೇಲೆ ಅಮರನಿಗೆಂದು ವಿಶೇಷವಾಗಿ ಆರ್ಡರ್ಮಾಡಿಸಿದ್ದ ಹೊಸ ಕನ್ನಡಕ ತರಲು ಹೋದಾಗ, “ಡಾಕ್ಟರ್ ‘ಡೇ ವಿಸಿಟಿಂಗ್’ ಮೇಲೆ ಆಸ್ಪತ್ರೆ ರೌಂಡ್ಸ್ ಗೆ ಹೋಗಿದ್ದಾರೆ. ಪ್ಲೀಸ್ ವೇಯ್ಟ್ ಮಾಡಿ” ಎಂದು ರಿಸೆಪ್ಷನಿಸ್ಟ್ ಹುಡುಗಿ ತಿಳಿಸಿದಳು. ಡಾಕ್ಟರ್ ಬರುವುದು ತಡವೆಂದು ತಿಳಿದ ಮೇಲೆ ಕುಸುಮಾ ವೇಯಿಟಿಂಗ್ ರೂಮಿನಲ್ಲಿ ಹೋಗಿ ಕುಳಿತಳು.              ಪದೇ ಪದೇ ಮಗನ ಪರಿಸ್ಥಿತಿಯ ಬಗ್ಗೆಯೇ ಯೋಚಿಸುತ್ತಾ ಒತ್ತಿ ಬರುತ್ತಿದ್ದ ದುಃಖಕ್ಕೆ ಬಿಕ್ಕಳಿಸುತ್ತಾ ಬಾಯಿಗೆ ಕರವಸ್ತ್ರ ಅಡ್ಡ ಹಿಡಿದುಕೊಂಡು ತಲೆತಗ್ಗಿಸಿ ಕುಳಿತಿದ್ದಳು. ವೇಯ್ಟಿಂಗ್ ರೂಮಿನಲ್ಲಿ ಇವಳಂತೆೇ ಡಾಕ್ಟರರನ್ನು ಕಾಣಲು ಬಂದಿದ್ದ ಹಲವರಿದ್ದರು.   ಸಣ್ಣವಯಸ್ಸಿನವರಾಗಿದ್ದ ಒಂದು ದಂಪತಿ ಜೋಡಿಯು,  ಕುಸುಮಾ ದುಃಖಿಸುವುದನ್ನು ನೋಡಿ ಹತ್ತಿರಬಂದು “ಅಳುತ್ತಿರುವುದು ಏಕೆ ?”ಎಂದು ಸಾಧಾನವಾಗಿ ಕಾರಣ ವಿಚಾರಿಸಿದರು. ಅವರ ಸಂತೈಸುವಿಕೆಯ ದನಿಯ ಮಾಂತ್ರಿಕ ಶಕ್ತಿಗೆ ಸಮಾಧಾನಗೊಂಡ ಕುಸುಮಾ ಬಿಕ್ಕಳಿಸುತ್ತಲೇ ತನ್ನ ದುಃಖದ ಕಾರಣ ತಿಳಿಸಿದಳು. ಆ ದಂಪತಿಗಳು ಆಕೆಯನ್ನು ಸಮಾಧಾನಿಸುತ್ತಾ, ‘’ನೋಡಿ, ಹೀಗೆ ಹೇಳುತ್ತಿದ್ದೇವೆಂದು ತಪ್ಪು ತಿಳಿಯಬೇಡಿ. ನಾವು ನಿಮಗಿಂತ ಸಣ್ಣವರೇ ಇರಬಹುದು. ಆದರೆ, ಬರೀ ಶೋಕಿಸುವುದರಿಂದ ಯಾವ ಪ್ರಯೋಜನವಿಲ್ಲ ಎಂದು ಮಾತ್ರ ಹೇಳಬಲ್ಲೆವು. ಸುಮ್ಮನೆ ಯೋಚಿಸುತ್ತಾ ಬೇಸರಪಡುತ್ತಾ ಕುಳಿತುಕೊಳ್ಳಬೇಡಿ. ವಿಜ್ಞಾನ ಮುಂದುವರೆದಿದೆ. ಹಲವು ಸಾಧನ- ಸಾಧ್ಯತೆಗಳಿವೆ. ನೀವು ಹೊಸ ಹುರುಪಿನಿಂದ ನಿಮ್ಮ ಮಗುವಿನ ಕನಸುಗಳಿಗೆ ಬಣ್ಣ ತುಂಬಿರಿ. ಮಗುವಿನ ಭವಿಷ್ಯವನ್ನು ವರ್ಣಹೀನ ಮಾಡಬೇಡಿ. ನಿಮ್ಮದೇನು ಅಂತಹ ದೊಡ್ಡ ಸಮಸ್ಯೆಯೇ ಅಲ್ಲ” ಎಂದು ನಿಧಾನವಾಗಿ ಸಂತೈಸಿ ತಮ್ಮ ಕುರ್ಚಿ ಬಳಿ ಮರಳಿ ಹೋದರು.    ‘’ನನ್ನದೇನು ದೊಡ್ಡ ಸಮಸ್ಯೆಯಲ್ಲವಾ..?! ನನ್ನ ದುಃಖ, ಹೊಟ್ಟೆ ಸಂಕಟ ಇವರಿಗೆ ಹೇಗೆ ತಿಳಿಯಬೇಕು? ಇವರ ಬಳಿ ನಾನು ಏಕಾದರು ನನ್ನ ಮಗನ ಸಮಸ್ಯೆ ಹೇಳಿಕೊಂಡೆನೋ..?!’’ ಎಂದುಕೊಂಡು ಕುಸುಮ ತನ್ನ ನೋವಿನ ಜೊತೆಗೆ ಈಗ ಕೋಪ ಅಸಮಾಧಾನಗಳನ್ನೂ ಹೊಂದಿದವಳಾಗಿ ಕುದಿಯತೊಡಗಿದಳು.    ಅವರು ಹೋಗಿ ಕುಳಿತ ಸ್ವಲ್ಪ ಹೊತ್ತಿನಲ್ಲೇ ಅವರ ಪಕ್ಕದ ಕುರ್ಚಿಯ ಬಳಿಯಲ್ಲಿ ಇರಿಸಲಾಗಿದ್ದ ಪ್ರಾಮ್ನಲ್ಲಿ ನಿದ್ರಿಸುತ್ತಿದ್ದ ಮಗುವೊಂದು ಎದ್ದು ಕಿಟಾರನೆ ಕಿರುಚಿ ರೋಧಿಸತೊಡಗಿತು. ಕುಸುಮಾಳ ಗಮನ ಆ ಮಗುವಿನತ್ತ ಹರಿಯಿತು. ಕ್ಷಣದ ಹಿಂದೆ ಯಾರನ್ನು ‘ತನ್ನ ಸಂಕಟ ಅರಿಯಲಾಗದವರು’ ಎಂದು ಮನಸ್ಸಿನಲ್ಲೇ ಜರಿದುಕೊಂಡಳೋ ಅದು ಅವರ ಮಗುವಾಗಿತ್ತು .       ದಂಪತಿಗಳು ಆ ಮಗುವನ್ನು ನಿಧಾನವಾಗಿ ಪ್ರಾಮ್ನಿಂದ ಮೇಲೆತ್ತಿಕೊಂಡು, ಬಹಳ ನಾಜೂಕಾಗಿ ಅದರ ಬಟ್ಟೆ ಸರಿಪಡಿಸುತ್ತಾ ಮೆಲ್ಲನೆ ದನಿಯಲ್ಲಿ ಸಂತೈಸಲು ತೊಡಗಿದರು. ಮಗುವಿನ ಮುಖ ತನ್ನತ್ತ ತಿರುಗುತ್ತಲೇ ಅದನ್ನು ಕಂಡ ಕುಸುಮ ಗರಬಡಿದಂತೆ ಸ್ಥಬ್ಧಳಾದಳು!        ‘ಅಮರನಿಗೆ ಕೆಲವೊಂದು ಬಣ್ಣ ಗುರುತಿಸಲು ತಿಳಿಯದಿದ್ದರೇನಂತೆ, ಕಡೇಪಕ್ಷ ಈ ಜಗತ್ತನ್ನಾದರೂ ಕಾಣುತ್ತಾನಲ್ಲಾ. ಈ ಅಮ್ಮನ ಮುಖವನ್ನಾದರೂ ನೋಡಿ ನಲಿಯುತ್ತಾನವನು. ಅವನಿಗೆ ಬಣ್ಣಗಳ ಬಗ್ಗೆ ತಿಳಿಯದಿದ್ದರೇನಂತೆ, ನನಗೆ ಅವನೇ ಕಾಮನಬಿಲ್ಲು. ನನ್ನ ಬಾಳಿಗೆ ಅವನೇ ಬಣ್ಣದೋಕುಳಿ, ಬಾಣಬಣ್ಣ’ ಎಂದು ತನ್ನ ಮನವನ್ನು ಸಂತೈಸಿಕೊಂಡಳು ಕುಸುಮ.    ಇನ್ನೂ ಅಳುತ್ತಲೇ ಇದ್ದ ಮಗುವನ್ನು ಸಂತೈಸಲು ಮನಸ್ಸಾಗಿ, ಕುಸುಮ ಅಮರನಿಗೆಂದು ಕೊಂಡಿದ್ದ ದೊಡ್ಡ ಕ್ಯಾಡ್ಬರೀಸ್ ಚಾಕ್ಲೇಟ್ ಅನ್ನು ಪರ್ಸಿನಿಂದ ತೆಗೆದು, ಅಳುತ್ತಿದ್ದ ಮಗುವಿನ ಬಳಿಗೆ ನಡೆದಳು. ಸ್ನೇಹದ ನಗೆ ಸೂಸುತ್ತಿದ್ದ ಆ ಮಗುವಿನ ಅಪ್ಪಅಮ್ಮನ ಕಣ್ಣುಗಳು ಕುಸುಮಾಳತ್ತ ತಿರುಗಿದಾಗ ಅಪಾರ ವಿಶ್ವಾಸದಲ್ಲಿ ಹೊಳೆಯುತ್ತಿದ್ದವು. ಆದರೆ, ಕಣ್ಣುಗಳಿರಬೇಕಾದ ಜಾಗದಲ್ಲಿ ಕೇವಲ ಎರಡು ಕುಳಿಗಳನ್ನು ಹೊಂದಿದ್ದ ಮಗುವನ್ನು ಅವರು ಎದೆಗವಚಿಕೊಂಡ ರೀತಿಯನ್ನು ಕಂಡಾಗ ಕುಸುಮಳಿಗೆ ‘ಎಲ್ಲಾ ತಾಯ್ತಂದೆಯರಿಗೂ ಅವರ ಮಗುವೇ ಅವರವರ ಬಾಳ ಬಣ್ಣ-  ಬಾಳ ಬೆಳಕು’ ಎಂಬ ಸತ್ಯ ಅರ್ಥವಾಗಿತ್ತು. ****************************

ಕಥಾಯಾನ Read Post »

You cannot copy content of this page

Scroll to Top