ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ನಾಲ್ಕು ದಿನದ ಪಯಣ

ಕಾವ್ಯಯಾನ ನಾಲ್ಕು ದಿನದ ಪಯಣ ತೇಜಾವತಿ ಹೆಚ್.ಡಿ. ಪ್ರವಾಹವೋ ಬಿರುಗಾಳಿಯೋಚಂಡಮಾರುತವೋ ಜ್ವಾಲಾಮುಖಿಯೋ ಸುನಾಮಿಯೋ… ಯಾವುದೋ ಒಂದು ವಿಕೋಪಬಂದೆರಗಲೇಬೇಕುನವನೆಲೆ ರೂಪಾಂತರವಾಗಲುಹೊಸ ಅಲೆ ಪ್ರಸಾರವಾಗಲು… ಬೇಕಾದದ್ದು ಬೇಡವಾಗಿಬೇಡವಾದದ್ದು ಬೇಕಾಗಿಕಸ ರಸವಾಗಿ, ರಸ ಕಸವಾಗಿಎಲ್ಲವೂ ತಲೆಕೆಳಾಗಾಗುವವಿಚಿತ್ರ ಸತ್ಯ-ಮಿಥ್ಯ ಪ್ರತಿಬಿಂಬಗಳ ದರ್ಶನವಾಗಲು…ಓ ಕಾಲನೇ… ವಜ್ರಕ್ಕಿಂತಲೂ ನೀನೆಷ್ಟು ಕಠೋರ.. ನಿನ್ನನುಗ್ರಹವಿದ್ದರೆಹೂವಿನ ಮೇಲಿನ ನಡಿಗೆಇಲ್ಲದಿದ್ದರೆ..ಕತ್ತಿಯ ಮೇಲಿನ ನಡಿಗೆಮುಟ್ಟಿದ್ದೆಲ್ಲಾ ಮಲ್ಲಿಗೆಯಾಗಿಸುವ ನಿನಗೆತಾಕಿದ್ದೆಲ್ಲ ನಂಜಾಗಿಸುವ ಕಲೆಯೂ ಕರಗತವಾಗಿದೆ ಬಿಡು.. ಎಂದಾದರೂ ನಿನ್ನಂತರಗವ ಅಳೆಯಲಾದೀತೇ…?ಈ ಕ್ಷಣಿಕದ ಗೊಂಬೆಗಳು..! ದಾನ ಮಾಡಿದ ಕರಗಳು ಬೇಡುವುದೆಂದರೇನು..ತನ್ನಸ್ತಿತ್ವವ ಪರರ ವಶದಲ್ಲಿಟ್ಟುನಶ್ವರದ ಬಾಳು ಬದುಕುವುದೆಂದರೇನು.. ನೂರೊಂದು ಮನೆಗಳ ಬೆಳಗಾಗಿದ್ದ ಬೆಳಕುಕತ್ತಲಕೋಣೆಯಲ್ಲಿ ಕೊಳೆಯುವುದೆಂದರೇನು…ದೃಷ್ಟಿ ಕಳೆದುಕೊಂಡ ನಯನಗಳುಎಲ್ಲಿದ್ದರೇನು… ಎಂತಿದ್ದರೇನು? ಭೂಮಿ ತಿರುಗುವುದುಕಾಲ ಉರುಳುವುದುಕಾಡು ನಾಡಾಗಿ, ನಾಡು ಕಾಡಾಗಿನೆಲ ನೀರಾಗಿ, ನೀರು ನೆಲವಾಗಿದೇಹ ಮಣ್ಣಾಗಿ, ಜೀವ ಹಾರಿಹೋಗಿ ಆತ್ಮ ಅಮರವಾಗುವುದು…. ಇದಿಷ್ಟೇ ತಾನೇ…ನಾಲ್ಕು ದಿನದ ಪಯಣ..ಇದಿಷ್ಟೇ ತಾನೇ..ಮುಕ್ತಗುಟ್ಟು… **************************

ನಾಲ್ಕು ದಿನದ ಪಯಣ Read Post »

ಕಾವ್ಯಯಾನ

ಸಾವಿತ್ರಿ

ಕವಿತೆ ಸಾವಿತ್ರಿ ಡಾ.ಸುರೇಖಾ ರಾಠೋಡ ವೀರ ಮಹಿಳೆ ಸಾವಿತ್ರಿಅಕ್ಷರದ ಅವ್ವ ಸಾವಿತ್ರಿ ಅಕ್ಷರ ಕಲಿಯಲು ಹೊರಾಡಿದಅಕ್ಷರ ಕಲಿಸಲು ಶ್ರಮಿಸಿದವೀರ ಮಹಿಳೆ ಸಾವಿತ್ರಿ ದಿನ ದಲಿತರ ಶಿಕ್ಷಣಕ್ಕಾಗಿನಿಂದನೆ, ಅಪಮಾನ, ಅವಮಾನಗಳನ್ನುಸಹಿಸಿದ ವೀರ ಮಾತೆ ಸಾವಿತ್ರಿ ಬಡವಬಲ್ಲಿದವರೆನ್ನೆದೆ ಎಲ್ಲರಸೇವೆ ಮಾಡಿದದೇಶದ ಮೊದಲ ಶಿಕ್ಷಕಿಮೊದಲ ಮುಖ್ಯೋಪಾಧ್ಯಾಯಿನಿಸಾವಿತ್ರಿ ಮಹಿಳಾ ಶಿಕ್ಷಣಕ್ಕಾಗಿ ಜೀವನವನ್ನೇಮುಡುಪಾಗಿಟ್ಟವೀರ ಮಾತೆ ಸಾವಿತ್ರಿ ಜ್ಯೋತಿ ಬಾ ಪುಲೆಯವರೊಂದಿಗೆಶಾಲೆಗಳನ್ನು ತೆರೆದ ಶಿಕ್ಷಣದಾತೆಸಾವಿತ್ರಿ ಜನರ ಕೆಂಗಣ್ಣಿಗೆ ಗುರಿಯಾಗಿಸಂಪ್ರದಾಯಸ್ಥರನ್ನು ಎದುರು ಹಾಕಿಕೊಂಡುದಿಟ್ಟತನದಿಂದ ಮುಂದೆ ನಡೆದದಿಟ್ಟ ಮಹಿಳೆ ಸಾವಿತ್ರಿ ಶಾಲಾ ಮಕ್ಕಳ ಬೇಕು ಬೇಡಗಳನ್ನುಕುಂದುಕೊರತೆಗಳನ್ನು ನಿಗಿಸಿದಸಹನಾಮಯಿ ಸಾವಿತ್ರಿ ಶಿಕ್ಷಣದ ಜೊತೆಗೆಜೀವನ ಕೌಶಲ್ಯ ಕಲಿಸಿದಜೀವನವಿಧಾತೆ ಸಾವಿತ್ರಿ ರೂಢಿ, ಸಂಪ್ರದಾಯ, ಸಮಾಜಿಕರಣದಕಟ್ಟಳೆಗಳನ್ನು ಮುರಿದು ಶವಸಂಸ್ಕಾರವ ಮಾಡಿದ ಧೈರ್ಯವಂತೆ ಸಾವಿತ್ರಿಅಕ್ಷರದವ್ವ ಸಾವಿತ್ರಿಮೊದಲ ಶಿಕ್ಷಕಿ ಸಾವಿತ್ರಿ ***********************

ಸಾವಿತ್ರಿ Read Post »

ಇತರೆ, ಜೀವನ

ಮಾತು ಮನವನ್ನು ಅರಳಿಸಬೇಕು

ಲೇಖನ ಮಾತು ಮನವನ್ನು ಅರಳಿಸಬೇಕು ಮಾಲಾ ಕಮಲಾಪುರ್ ಭಾಷೆ ಮನುಷ್ಯನಿಗೆ  ಲಭಿಸಿದ ದೈವ ದತ್ತ ವರ ವಾದರೆ ಮಾತು ನಮ್ಮ ಭಾವನೆಗಳನ್ನು ಅಭಿವ್ಯಕ್ತಗೊಳಿಸುವ ಮೂಲಕ ಅಮೂಲ್ಯ ಸಾಧನ ಆಗಿದೆ. ಮಾತು ನಮ್ಮ ಬದುಕನ್ನು ಕಟ್ಟುತ್ತದೆ. ಇದು ವ್ಯಕ್ತಿಯ  ಬಿಚ್ಚಿಡುವ ಪಾರಿಜಾತದ ಪರಿಮಳದಂತೆ. ನಾವಾಡುವ ಮಾತು ಪುಷ್ಪದ ದಳದಂತೆ. ಮಾತಿನ ಬಳಕೆ  ಬಲ್ಲವರು ಮಾಣಿಕ್ಕ್ಯ ತರುತ್ತಾರೆ. ಬಳಿಕೆ ಅರಿಯದವರು ಜಗಳ ತರುತ್ತಾರೆ.ಮನುಷ್ಯನು  ಯಾವುದೇ ಲೌಕಿಕ ವಾದ ವಸ್ತು ಗಳಿಂದ ಅಲಂಕಾರ ಮಾಡಿಕೊಂಡರು ಶೋಭಿಸುವುದಿಲ್ಲ. ಆದರೆ ಒಳ್ಳೆಯ ಮಾತು ಮತ್ತು ಪ್ರಾಮಾಣಿಕ  ಮಾತುಗಳಿಂದ  ಅಲಂಕಾರ ದಿಂದ  ಶೋಭಿಸುತ್ತಾನೆ. ಮನುಷ್ಯನ  ಅಂತಸ್ತಾಗಲಿ, ಕುಲವಾಗಲಿ ಯಾವದು ಆತನ ಯಶಸ್ಸಿಗೆ ಕಾರಣವಾಗುವುದಿಲ್ಲ. ಮಧುರ ಮಾತೇ ಆತನ ಗೆಲುವಿಗೆ ಕಾರಣವಾಗುತ್ತದೆ.ಮಾತು ಮನವನ್ನು ಅರಳಿಸವೇಕು, ಹೃದಯತಣಿಸಿ ಜೀವಕ್ಕೆ ಕಳೆಯನ್ನು ತುಂಬ ಬೇಕು. ಶರಣರಾಗಲಿ, ದಾಸರಾಗಲಿ ತಮ್ಮ ನಡೆ ನುಡಿ ಸಾಮರಸ್ಯದ  ಬೆಸುಗೆಯನ್ನೇ ಬೆಸೆದಿದ್ದಾರೆ. ಅದಕ್ಕೆ ಬಸವಣ್ಣ ನವರು ನುಡಿದಡೇ  ಮುತ್ತಿನ ಹಾರದಂತೆ ಇರಬೇಕು, ನುಡಿದರೆ ಮಾಣಿಕ್ಕ್ಯದ  ದೀಪ್ತಿಯಂತಿರಬೇಕು, ನುಡಿದಡೆ ಸ್ಪಟಿಕದ ಸಲಾಕೆಯಂತಿರಬೇಕು ಎಂದು ಸಾರಿದ್ದಾರೆ.ನಾವು ಮಾತನಾಡುವಾಗ ಸಮಯ ಸಂಧರ್ಭ ಅವಲೋಕಿಸಿ ಮಾತನಾಡಬೇಕು. ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು ಎಂಬ ಪ್ರಚಲಿತ ಗಾದೆ ಮಾತು ಇದೆ ಮಾತಿಗೆ ಕ್ಷಮೆ ಕೇಳಬಹದು ಆದರೆ ಅದರಿಂದಾಗುವ ನೋವು ಶಮನವಾಗುವುದಿಲ್ಲ. ಪುರಾಣ ಕಾಲದಲ್ಲಿಯೂ ಋಷಿ ಮುನಿಗಳ ಮಾತು ಕೋಪ ತಾಪ ದಿಂದ ಹೊರ ಬಂದಾಗ ಶಾಪವಾಗುತ್ತಿತ್ತು. ಅವರು ಅರಳಿದ ಹೃದಯದಿಂದ ಮಾತು ವರವಾಗುತಿತ್ತು. ಬಲ್ಲವರು ಕಡಿಮೆ ಮಾತುಗಳಲ್ಲಿ ಮೌಲ್ಲ್ಯಾ ಧಾರಿತ ವಿಷಯಗಳನ್ನು ಬಿಚ್ಚಿಡುತ್ತಾರೆ. ಮಾತು ಹಿತವಾದಷ್ಟು ಒಳಿತು. ಅದಕ್ಕೆ ನಮ್ಮ ಹಿರಿಯರು ಮಾತು ಬೆಳ್ಳಿ ಮೌನ ಬಂಗಾರ ಎಂದಿದ್ದಾರೆ.ಒಟ್ಟಿನಲ್ಲಿ ಹೇಳುವುದಾದರೆ ನಮ್ಮ ನಾಲಿಗೆ ಒಳ್ಳೇದು ಆದರೆ ನಾಡೆಲ್ಲ ಒಳ್ಳೇದು. ಅದಕ್ಕೆ ನಮ್ಮ ಹಿರಿಯರು ಊಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ ಅಂತ ಹೇಳಿದರು. ಮೃದುವಾದ ಮಾತು ಕಠೋರ ವ್ಯಕ್ತಿ ಗಳ ಹೃದಯವನ್ನು ಕರಗಿಸುತ್ತದೆ ಪ್ರಾಮಾಣಿಕ ಮಾತು ಮನುಷ್ಯನ ಕೀರ್ತಿಯನ್ನು ಹೆಚ್ಚಿಸುತ್ತದೆ. ************************

ಮಾತು ಮನವನ್ನು ಅರಳಿಸಬೇಕು Read Post »

ಪುಸ್ತಕ ಸಂಗಾತಿ

ನನ್ನ ಪ್ರೀತಿಯ ಭಾರತ

ಪುಸ್ತಕ ಸಂಗಾತಿ ನನ್ನ ಪ್ರೀತಿಯ ಭಾರತ ಪುಸ್ತಕ:  ನನ್ನ ಪ್ರೀತಿಯ ಭಾರತ ಲೇಖಕರು : ಜಿಮ್ ಕಾರ್ಬೆಟ್  ಕನ್ನಡಕ್ಕೆ : ಪ್ರೊ.ಆರ್.ಎಸ್.ವೆಂಕೋಬ್ ರಾವ್ ಪ್ರಕಾಶನ : ಚಾರು ಪ್ರಕಾಶನ ,ಬೆಂಗಳೂರು ಬೆಲೆ: 125 ಲಭ್ಯತೆ: ಸಂಗಾತ ಪುಸ್ತಕ ,ಧಾರವಾಡ ಜಿಮ್ ಕಾರ್ಬೆಟ್ ಹೆಸರು ಕನ್ನಡಿಗರಿಗೆ ಚಿರಪರಿಚಿತ ,ಪೂರ್ಣ ಚಂದ್ರ ತೇಜಸ್ವಿ ಅವರಿಂದ ಕಾಡಿನಕಥೆಗಳ ಸರಣಿಗಳ ಮೂಲಕ  ಮನೆಮಾತಾಗಿರುವ ಜೀಮ್ ಕಾರ್ಬೆಟ್ ಮತ್ತು ಅವರ ಬರಹ ನಾಲ್ಕು ಗೋಡೆಗಳ ನಡುವೆ ,ಕಾಂಕ್ರೀಟ್ ಸೀಮೆಯ ಯಲ್ಲೂ ಪುಸ್ತಕಗಳನ್ನು ಹೀಡಿದರೆ ಕಾಡಿನ ರೋಚಕತೆಯನ್ನು ಓದಗರಿಗೆ ಅನಾಯಾಸವಾಗಿ ಓದಗಿಸುತ್ತವೆ… !     ” ಪುಸ್ತಕ ನನ್ನ ಪ್ರೀತಿಯ ಭಾರತ ” ಶೀರ್ಷಿಕೆಯೇ  ಹೇಳುವಂತೆ ಬಿಳಿ ಸಾಹೇಬರು ಭಾರತದಲ್ಲಿ ಭಾರತೀಯನಾಗಿ ಕಂಡ ಅನುಭವಗಳ ಪಾಕ ಈ ಬರಹ. ಇಲ್ಲಿಯ ಮಾತು ಅಂದರೆ, ಕೃತಿಯೊಳಗೆ ಮುಗ್ದತೆ, ಮನವೀಯತೆ , ಸಹೃದಯವಂತಿಕೆಯ ಗಾಢತೆಯೇ ಆನಾವರಣಗೊಂಡಿದೆ.      ಜಿಮ್ ಕಾರ್ಬೆಟ್ ಒಬ್ಬ ಶಿಕಾರಿಕಾರನಾಗಿ ಮಾತ್ರ ಇಲ್ಲಿ ಕಾಣುವದಿಲ್ಲ. ಅವರಲ್ಲಿನ ಒಬ್ಬ  ಗೆಳೆಯ , ಕಾವಲುಗಾರ , ಹಳ್ಳಿಗ ,ಭಾರತೀಯ ಸಾಹೇಬನಾಗಿ ಹುದುಗಿದ ಅವರಲ್ಲಿನ ಹೃದಯವಂತಿಕೆ ,ಮಮತೆ ಹೀಗೆ ಹಲವಾರು ಪಾತ್ರಗಳಲ್ಲಿ ಕಾರ್ಬೇಟ್ ಓದುಗರಿಗೆ ಎದುರಾಗುತ್ತಾರೆ .    ಸಾಮಾನ್ಯರಲ್ಲಿನ ಅಸಾಮಾನ್ಯ ಶಕ್ತಿಯನ್ನು ಗುರಿತಿಸುವಲ್ಲಿ ಕಾರ್ಬೆಟ್ ಅವರು ಸಿಧ್ದ ಹಸ್ತರು. ಅವರ ಕಾಡಿನ ಬರಹಗಳಲ್ಲಿ ಸ್ಥಳೀಯ ವ್ಯಕ್ತಿಗಳನಡುವಿನ ಒಡನಾಟ ,ಸ್ನೇಹ ವನ್ನು  ಇಲ್ಲಿ ಕಾಣಬಹುದು ಇದು ಓದುಗರಲ್ಲಿ ಬೆರಗು ಮೂಡಿಸುತ್ತದೆ . ಇಲ್ಲಿ ಪ್ರಾಣಿ ಪರಿಸರದ ಕತೆ ಅಲ್ಲದೆ ನಿಷ್ಠಾವಂತ, ಪ್ರಾಮಾಣಿಕ ,ದಕ್ಷ  ಜನಸಾಮಾನ್ಯರೂಂದಿಗೆ ಬೆರೆತ ನ್ಯಾಯಾಧೀಶ……..  ಬಹುಮಾನಕ್ಕಾಗಿ ಮಕ್ಕಳನ್ನು ಹೊತ್ತು ತಂದು ಬಹುಮಾನ ನಿರಾಕರಿಸಿದ ಮೇಲ್ಜಾತಿ ಬಡ ಕೂಲಿಯವ….!!! ಹೀಗೆ ಹಲವಾರು ಪಾತ್ರಗಳು ಓದುಗರ ಮನದಲ್ಲಿ ಉಳಿಯುತ್ತವೆ . ಬಡತನ ,ಹಸಿವು , ಇದ್ದರು ಗುಣದಲ್ಲಿ ಅಗರ್ಭ ಶ್ರೀಮಂತರಾದ ಹೃದಯಗಳು ಇರುವದರಿಂದಲೇ ಶೀರ್ಷಿಕೆ ನನ್ನ ಪ್ರೀತಿಯ ಭಾರತವಾಗಿದೆ ಎಂದು ಊಹಿಸಬಹಿದು .         ಒಂದೆಡೆ ಹಸಿವಿನಿಂದ ಸಾಯುವ ಜನವಾದರೆ ಮತ್ತೊಂದೆಡೆ ಸಮೃದ್ಧ ಅರಣ್ಯ , ಕಾಡು ಮೃಗಗಳಿಗೆ ಆಹಾರ ವಾಗುವ ಬಡಜನ. ಅಂದಿನ ಭಾರತದ ಮಹಿಳೆಯ ಸ್ಥಿತಿ -ಗತಿಗಳು ,ಪ್ರಾದೇಶಿಕ ವಿವರ ಎಲ್ಲದರ ಬಗ್ಗೆ ಕೃತಿ ಮಾಹಿತಿ ನೀಡುತ್ತದೆ . ಪುಣ್ವನ ತಾಯಿ ಇಂದಿಗೊ ಹಲವು ರೂಪಕಗಳಲ್ಲಿ ಕಾಣುವಂತೆ ಚಿತ್ರತವಾಗಿದೆ,ಮಕ್ಕಳಿಗಾಗಿ ಪರಿತಪಿಸುವ ಎಳೆಯ ಕುಂತಿ ದಂಪತಿಗಳು .ತಪ್ಪಸಿಕೊಂಡು ಕಾಡಿನಲ್ಲಿ ಇದ್ದ  ಎಳೆಯ ಮಕ್ಕಳನ್ನು ಮುಟ್ಟದ  ಕಾಡು ಮೃಗಗಳು ! .ಈ ಕುರಿತು ಜಿಮ್ ಅವರ ಅಪರೂಪ ವಿವರಣೆ ಇದೆ .   ನ್ಯುಮೋನಿಯಾ ಕ್ಕೆ ತುತ್ತಾಗಿ ಪ್ರಾಣ ಬಿಟ್ಟ ಎಳೆಯ ಜಿಮ್ ಕಾರ್ಬೆಟ್ ಸ್ನೇಹಿತ ಅತನ ಅಸಮಾನ್ಯ ಪ್ರತಿಭೆಗೆ ಜಿಮ್ ಅವರು ಸೋತು ಹೋಗಿರುತ್ತಾರೆ . ಸ್ಥಳೀಯ ಜನರಲ್ಲಿ ಅವರಿಗೆ ಇದ್ದ  ಅದಮ್ಯಯ ಕಾಳಜಿ‌, ಅವರ ಮುಗ್ದತೆಯ ಬಗ್ಗೆ ಇದ್ದ ಸಹಾನುಭೂತಿ ಎಲ್ಲವನ್ನು ಪುಸ್ತಕ ಚಿತ್ರಸಿದೆ .      ಕೃತಿಯಲ್ಲಿನ ಕಾಡಿನ ವಿದ್ಯಮಾನಗಳಿಗೆ ಜಿಮ್  ಅವರ ವಿವರಣೆ ಇದೆ ಕಾಡಿನ ಮೊರೆತದ ಆಲಿಸುವಿಕೆ ಇದೆ ಕಾಡು ಎಂದರೆ ಬರಿ ಮರ ಅಲ್ಲ , ಮೃಗಗಳು ಅಲ್ಲ ಅದು ಮಮತೆ ನೆಲೆ. ಪುಸ್ತಕ ಹಲವರು ಮಾನವೀಯ ವೈವಿಧ್ಯಮಯ ಭಾರತವನ್ನು ಭಾವನಾತ್ಮಕ ಹಾಗೂ ಬೌದ್ಧಿಕ ನೆಲೆಯಲ್ಲಿ ದರ್ಶಿಸುತ್ತದೆ  ಓದುಗರನ್ನು .                       ***************************** ರೇಶ್ಮಾಗುಳೇದಗುಡ್ಡಾಕರ್

ನನ್ನ ಪ್ರೀತಿಯ ಭಾರತ Read Post »

ಅಂಕಣ ಸಂಗಾತಿ, ಕಬ್ಬಿಗರ ಅಬ್ಬಿ

ಅಂಕಣ ಬರಹ ಕಬ್ಬಿಗರ ಅಬ್ಬಿ ಮಗುವಿನ ಪರಿಮಳ ಆ ಮಗು ಹುಟ್ಟಿ ಆಗಷ್ಟೇ ಮೂರು ತಿಂಗಳು ದಾಟಿರಬೇಕು. ಬೆಳಕಿನತ್ತ ಮುಖ ಮಾಡುತ್ತೆ. ಹೊಸ ಮುಖಗಳನ್ನು ನಿರ್ಮಲ ಕಣ್ಣುಗಳೊಳಗೆ ತುಂಬಿ ಏನೋ ನೆನಪಿಸಿಕೊಂಡಂತೆ ತನ್ನಷ್ಟಕ್ಕೇ ಮುಗುಳು ನಕ್ಕು ದೃಷ್ಟಿ ಬದಲಿಸುತ್ತೆ.  ಮಾಮನಿಗೆ ಆ ಮಗುವಿನೊಂದಿಗೆ ಆಡುವುದೆಂದರೆ ಇಷ್ಟ!. ಆತ, ಮಗುವಿನ ನುಣುಪು ಹೊಟ್ಟೆಗೆ, ಹೊಕ್ಕುಳ ಸುತ್ತ ತನ್ನ ಮೂಗು ಸವರಿ ” ಪಂಬಳ ಪಂಬಳ ಬತ್ತನ್ನೇ!” ( ಪರಿಮಳ ಪರಿಮಳ ಬರ್ತಿದೇ!) ಅಂತ ಆಘ್ರಾಣಿಸುತ್ತಾನೆ. ಮಗು ತನ್ನ ಬೊಚ್ಚುಬಾಯಿ ಅಗಲಿಸಿ ಗಟ ಗಟ ನಗುತ್ತೆ. ಪುಟ್ಟ ಕೈಗಳನ್ನು ಚಪ್ಪಾಳೆ ಹೊಡೆಯುವಂತೆ ಅಲುಗಾಡಿಸುತ್ತೆ!. ಹೌದು!! ಮಗುವಿಗೆ ಅನೂಹ್ಯ ಪರಿಮಳವಿದೆ.‌ ಆ ಪರಿಮಳ ಮುಗ್ಧ ಪರಿಮಳ. ಕಲಬೆರಕೆಯಾಗದ ಪರಿಮಳ. ಈ ಲೋಕದ್ದೇ ಅಲ್ಲವೋ ಎನ್ನುವ ಪ್ರೀತಿಯ ಪರಿಮಳ. ಮಗು ಬೆಳೆಯುತ್ತಾ ಹೋದಂತೆ, ಆ ಪರಿಮಳ ಮರೆಯಾಗಿ, ಕಲೆಯುತ್ತಾ, ಕಲಿಯುತ್ತಾ ಹೋದಂತೆ,  ಸಮಾಜದ ‘ವಾಸನೆ’ ದೇಹಕ್ಕಂಟುತ್ತೆ.  ಮಗುವಿನ ಪರಿಮಳವನ್ನು ಉಳಿಸಿಕೊಳ್ಳಲು ಸಾಧ್ಯವಿದೆಯೇ?. ಆರು ದಶಕಗಳ ಬದುಕಿನ ದಾರಿಯಲ್ಲಿ ಇಷ್ಟೊಂದು ಗಂಧಗಳು ಮೈ ಮನಸ್ಸಿಗೆ ಅಂಟಿಕೊಳ್ಳುವಾಗ ಮಗುವಾಗಿದ್ದಾಗಿನ ಪರಿಮಳ ಉಳಿಸಿಕೊಂಡು ಹಿಂತಿರುಗಿ ನೋಡಿದರೆ ಹೇಗಿರಬಹುದು!? ಬೆಂಗಳೂರಿನ –  ” ಇಷ್ಟು ಕಾರು, ಬಸ್ಸು,  ಮೆಟ್ರೋ ರೈಲುಗಳು ಓಡಾಡುವ ಜಾಗದಲ್ಲಿ, ಉಸಿರಿದ್ದರಷ್ಟೇ ಸಾಕು ಎಂದು ಜನರು ನಿಟ್ಟುಸಿರಿಡುವಲ್ಲಿ ದೊಡ್ಡದೊಂದು ತೆಂಗು ಗರಿ ತೇಲುತ್ತಾ ಮನೆಯೊಳಕ್ಕೆ ಬಂದು ಬಿದ್ದಿದ್ದನ್ನು ನಂಬುವುದು ಹೇಗೆ?!. ಮನುಷ್ಯರಿಗೆ ಮನುಷ್ಯನ ದನಿಯೇ ಕೇಳದ ಜಾಗದಲ್ಲಿ ಈ ವಲಸೆ ಗರಿಯ ಸದ್ದು ಅವಳಿಗೆ ಕೇಳಿದ್ದಾದರೂ ಹೇಗೆ?!” ಹೀಗೆ ಪೇಟೆಯಲ್ಲಿ ಮನೆಕಟ್ಟಿದ ವಯಸ್ಕ ಮನಸ್ಸೊಳಗೆ ಬಾಲ್ಯದ ನೆನಪಿನ ತೆಂಗಿನ ಮಡಲು ಹಾರಿ ಬರುತ್ತೆ.  ಆಕೆ, ಆ ಮಡಲಿನ ಒಂದೊಂದೇ ಪುಟ್ಟ ಗರಿಗಳನ್ನು ಕೀಳುತ್ತಾಳೆ. ಮೊದಲು ಹೆಣೆಯುವುದೇ ಚಾಪೆ!. ಅದರಲ್ಲಿ ಕುಳಿತು ಗರಿಯ ವಾಚು, ಊದಲು ಪೀಪೀ ಗೆಳೆಯರನ್ನು ಕರೆದು ಅವರಿಗೆಲ್ಲ ‘ಕನ್ನಡಕ’. ” ಕಣ್ಣ ಕನಸುಗಳು ಗರಿಯ ತೋರಣ ಕಟ್ಟಿದವು. ಎಲ್ಲರೂ ಗಿರಗಿಟ್ಟಲೆಯಾಗಿ ಗರಗರ ತಿರುಗಿದರು. ಒಂದೊಂದೇ ಗರಿಗಕ್ಕಿಗಳ ಮಾಡಿ ಹಾರಲು ಬಿಟ್ಟರು.” ಆ ಹಕ್ಕಿಗಳು, ನೆರೆಮನೆಗಳ ಜಜ್ಜಕ್ಕೆ ಬಡಿದು, ಚರಂಡಿಯಲ್ಲಿ ಸಿಕ್ಕಿ ಉಸಿರುಗಟ್ಟಿ, ಗಾಳಿಯ ಚಕ್ರಕ್ಕೆ ಸಿಕ್ಕಿ, ಸಾಯುತ್ತವೆ. ಚೆಲ್ಲಾಪಿಲ್ಲಿಯಾದ ಹಕ್ಕಿಗಳ ಬದುಕನ್ನು ಕಂಡ ಗೆಳೆಯರು ಜಾಗ ಖಾಲಿ ಮಾಡುತ್ತಾರೆ.  ಆದರೆ, ಆಕೆ ಉಳಿದ ಗರಿಗಳನ್ನು ಕಟ್ಟಿ ಪೊರಕೆ ಮಾಡಿ, ಕನಸಿನ ಹಿಡಿಕೆಯನ್ನು ಗರಿಯಲ್ಲೇ ಕಟ್ಟುತ್ತಾಳೆ!. ಅದಕ್ಕೇ ಆಕೆ ಮಗುವಾಗಿದ್ದಾಗಿನ ಪರಿಮಳ ಇನ್ನೂ ಇದೆ!. ಎಂ. ಆರ್. ಕಮಲಾ ಅವರ ಗದ್ಯಗಂಧೀ ಕವಿತೆಗಳು ಪುಸ್ತಕದ ಸಾಲುಗಳವು. ಇದೊಂದು ಆತ್ಮಕವಿತೆ! ಬಾಲ್ಯದ ನಿರ್ಮಲಾನಂದೋಬ್ರಹ್ಮನ ಅನುಭೂತಿಯನ್ನು ಹೊತ್ತು, ಜೀವಕೋಶಗಳು ಬಲಿತಂತೆ, ಸುತ್ತಲಿನ ಒಂದೊಂದೇ ವಾಸನೆಗಳನ್ನು ತುಂಬಿ ಲಯಿಸಿಕೊಂಡು, ಒಂದೊಂದೇ ಬಣ್ಣವನ್ನು ಕಲೆಸಿ ಲೇಪಿಸಿಕೊಂಡು, ತನ್ನ ಸುತ್ತಲೂ ಸ್ವರ ಮಂಡಲದ ಹಲವು ತರಂಗಗಳ ಸಂಕೀರ್ಣ ಪ್ರಸ್ತಾರವನ್ನು ಸಂಗೀತವಾಗಿಸಿಕೊಂಡು, ರುಚಿಗೆ ರುಚಿಯಾಗಿ ರುಚಿಕಟ್ಟಿ ಅಭಿರುಚಿ ಸೃಷ್ಟಿಸಿಕೊಂಡು ನಡೆದ ದಾರಿಯ ಇನ್ನೊಂದು ತುದಿಯಲ್ಲಿ ಕವಯಿತ್ರಿ ನಿಂತು, ಪ್ರತಿಫಲಿಸುತ್ತಾರೆ. ‘ಗದ್ಯಗಂಧೀ ಕವಿತೆಗಳು’, ಪುಸ್ತಕದಲ್ಲಿ, ಹಾಗೆ ನೋಡಿದರೆ ಒಂದೇ ಕವಿತೆಯಿದೆ, ಅಂತ ನನ್ನ ಅನಿಸಿಕೆ. ಒಂದೊಂದೇ ಪುಟವೂ ಒಂದು ಭಾವಕ್ಕೆ, ಇಂದ್ರಿಯಗ್ರಾಹ್ಯ ಅನುಭವಕ್ಕೆ, ನಗೆಯ ಚಿಗುರು ತುಟಿಗೆ, ನೋವಿನ ಕಣ್ಣೀರ ಬಿಂದುಗಳಿಗೆ ‘ಗಂಧ’ವಾಗುತ್ತೆ. ಮಹಾಭಾರತ ಆರಂಭವಾದದ್ದೇ ರಾಜ ಆಕರ್ಷಿತನಾದ ಆ ಗಂಧದಿಂದ. ಶಂತನು ಮಹಾರಾಜ ‘ಯೋಜನಗಂಧಿ’ ಯ ಪರಿಮಳಕ್ಕೆ ಸೋತ ಕ್ಷಣವದು. ‘ಗಂಧ’ ಕ್ಕೆ ಅಂತಹ ಅಪರಿಮಿತ ಶಕ್ತಿಯೂ ಇದೆ, ವ್ಯಾಪ್ತಿಯೂ ಇದೆ. ಗದ್ಯಗಂಧೀ ಕವಿತೆಗಳು, ಇದರ ಎಲ್ಲಾ ಪುಟಗಳ ತುಂಬಾ ಮನಸ್ಸಿನೊಳಗಿನ ಪದರಗಳಲ್ಲಿ ಮೂಡಿದ ಪ್ರತಿಮೆಗಳು ನಿತ್ಯನೋಟದ ವಸ್ತುಗಳ ರೂಪದಲ್ಲಿ ಪ್ರಕಟವಾಗುತ್ತದೆ. ಪ್ರತೀ ಪುಟದಲ್ಲೂ ಮಗು ಮನಸ್ಸು ಮತ್ತು ಸಮಾಜದ ಕಲೆಕ್ಟಿವ್ ಮನಸ್ಸುಗಳ ತುಯ್ದಾಟ ಹಲವು ರೂಪ ಪಡೆದು ಚಿಂತನೆಗೆ ಹಚ್ಚುತ್ತವೆ. ಗದ್ಯದಂತಹ ಸಾಲುಗಳಲ್ಲಿ, ಪದ್ಯಾತ್ಮ ಪ್ರತಿಷ್ಠೆ ಮಾಡುವ ಪ್ರಯತ್ನ ಎನಬಹುದೇ?. ಸಾಧಾರಣವಾಗಿ ಹಿಂದಿ/ ಉರ್ದು ಶಾಯರಿಗಳಲ್ಲಿ ಕಂಡು ಬರುವ ಪಂಚ್ ಲೈನ್ ನ ಹಾಗೆ ಪುಟದ ಕೊನೆಗೆ ಕವಯಿತ್ರಿ, ತನ್ನ ಥಾಟ್ ಲೈನ್ ಅನ್ನು ಪ್ರಕಟಿಸುತ್ತಾರೆ. ಆ ಸಾಲು, ಬಾಲ್ಯದ  ಗಂಧಕ್ಕೇ ವಾಲಿರುವುದೂ ಅಥವಾ ಅದನ್ನು ರಿ-ಇನ್ವೆಂಟ್ ಮಾಡುವ ಪ್ರಯತ್ನ ನಡೆಯುವುದೂ ಸ್ಪಷ್ಟ. ಇದಕ್ಕೆ ಸಾಮ್ಯವಿರುವ ಪ್ರಯತ್ನವೇ ಎಂದು ಹೇಳುವ ಭಾಷಾ ಪಾಂಡಿತ್ಯ ಇಲ್ಲದಿದ್ದರೂ, ವಿದ್ಯಾರ್ಥಿಯ ಕನವರಿಕೆಯ ಹಾಗೆ, ಇದನ್ನು ಉಲ್ಲೇಖಿಸ ಬಯಸುತ್ತೇನೆ. ಕೆ.ವಿ.ತಿರುಮಲೇಶ್ ಅವರ ಈ ಮಹತ್ತರವಾದ ಅಕ್ಷಯ ಕಾವ್ಯ ಪುಸ್ತಕದಲ್ಲಿ ಸುಮಾರು ೪೭೮ ಪುಟಗಳು. ಬಿಡಿ ಬಿಡಿಯಾದ,ಆದರೂ ಇಡಿಯಾದ ಕವಿತೆಗಳು. ತಮ್ಮ ಅಕ್ಷಯ ಕಾವ್ಯ ಪುಸ್ತಕದ ಮುನ್ನುಡಿಯಲ್ಲಿ, ಅವರು ಹೀಗೆ ಬರೆಯುತ್ತಾರೆ. ” ಸೂತ್ರಬದ್ಧತೆ, ಸುಸಂಬದ್ಧತೆ, ಕ್ರಮಬದ್ಧತೆ ಮುಂತಾದ ಯಾವುದೇ ಬದ್ಧತೆಗಳನ್ನು ಈ ಕಾವ್ಯ ಪರಿಪಾಲಿಸಿದ್ದಕ್ಕಿಂತ ಉಲ್ಲಂಘಿಸಿದ್ದೇ ಹೆಚ್ಚು. ಆದ್ದರಿಂದ ಸಾಲು ಸಾಲುಗಳ ನಡುವೆ ಕಂದಕಗಳು ನಿಜವಾದ ಕಂದಕಗಳು ಆದರೂ ಇಲ್ಲೆಲ್ಲೂ ಅಮಾನುಷ ಪ್ರಪಂಚವಿಲ್ಲ…ಕಾವ್ಯಕ್ರಿಯೆಯ ಒಳಹೊರಗಣ ಸೀಮೆಗಳ ಮಿತಿಗಳ ಸ್ಪರ್ಶಿಸುತ್ತಲು ಹಿಂದೆಗೆಯುತ್ತಲು ಮುಗಿಯದ ಕ್ರಿಯೆ ಸದ್ಯ ಇದೊಂದೇ ಸಾಧ್ಯ.” ಈಗ ಗದ್ಯಗಂಧೀ ಕವಿತೆಗಳಿಗೆ ಪುನಃ ಬರೋಣ. ಈ ಒಟ್ಟೂ ಪುಸ್ತಕದ  ಕವಿತೆಯ ಅಷ್ಟೂ ‘ಗಂಧ’ ಗಳನ್ನೂ ಬರೆಯಲು ಅಸಾಧ್ಯವಾದರೂ ಎರಡು  ಪರಿಮಳ ದ್ರವ್ಯಗಳನ್ನಾದರೂ ಗ್ರಹಿಸುವ ಪ್ರಯತ್ನ ನನ್ನದು. ” ಅವಳ ಮನೆಯಲ್ಲಿ ಮೂರು ಕನ್ನಡಿಗಳಿದ್ದವು.” ಎಂದು ಆರಂಭವಾಗುವ ಕವಿತಾದಳದಲ್ಲಿ, ನೆರೆಮನೆಯ ಹುಡುಗಿ ಮತ್ತು ಈಕೆ ಎರಡು ಕನ್ನಡಿಗಳನ್ನು ಎದುರು ಬದುರು ಇಡುತ್ತಾರೆ. ” ಆಹಾ! ಒಂದರೊಳಗೊಂದು ಒಂದರೊಳಗೊಂದು ಕನ್ನಡಿಗಳು! ಕೊಂಚ ಮುಖ ತೂರಿಸಿ ಲೆಕ್ಕವಿರದಷ್ಟು ಬಿಂಬಗಳನ್ನು ಎದೆಯಲ್ಲಿ ಸೆರೆಹಿಡಿದು ಕನ್ನಡಿಗಳ ಸ್ವ ಸ್ಥಾನಕ್ಕೆ ಸೇರಿಸಿದರು.” ಎರಡು ಪುಟ್ಟ ಮಕ್ಕಳ ಆಟದಂತೆ ಕಾಣುವ ಈ ಚಿತ್ರ, ಚಿತ್ತಗನ್ನಡಿಗಳ ನಡುವಿನ ಅಸಂಖ್ಯ ಪ್ರತಿಫಲನಗಳಲ್ಲವೇ? ಆ ಹುಡುಗಿಯ ಯೌವನದಲ್ಲಿ ದಿವಾನಖಾನೆಯ ಕನ್ನಡಿಯೊಳಗಿಂದ ಹುಡುಗ ಹಾಡತೊಡಗಿ, ಅವಳು “ಮಾಯಾಬಜಾರಿ”ನ ಶಶಿರೇಖೆಯಾದಳು. ಹೀಗೆ ಒಂದು ಕನ್ನಡಿಯ ಸುತ್ತ ಪ್ರತಿಫಲಿಸುತ್ತವೆ ಹಲವು ಪ್ರತಿಮೆಗಳು. ಈ ಪುಟದ ಕೊನೆಯ ಸಾಲು ಹೀಗಿದೆ. ” ಈಗಂತೂ ಕನ್ನಡಿಯನ್ನು ಬೀದಿಯ ಕಡೆಗೆ ಮುಖಮಾಡಿ ಇರಿಸಿಬಿಟ್ಟಿದ್ದಾಳೆ. ಹಾದು ಹೋಗುವ ಪ್ರತೀ ಜೀವಿಯ ನೋವು,ನಲಿವು ಅವಳ ಎದೆಯಲ್ಲಿ ಪ್ರತಿಫಲಿಸುತ್ತದೆ.” ಕನ್ನಡಿಯೇ ಕವಯಿತ್ರಿಯ ಹೃದಯವೂ ಆಯಿತು. ಅದು ಸದಾ ಸಮಾಜದ ಚಲನೆಯ, ಬೀದಿಯ ಅಷ್ಟೂ ಡೈನಾಮಿಕ್ಸ್ ಗೆ, ಭಾವ ವೈವಿಧ್ಯಕ್ಕೆ ಕನ್ನಡಿ ಆಗುತ್ತೆ, ಹೃದಯ ಬರೇ ಕನ್ನಡಿಯೇ?. ಇದೊಂದು ಸ್ಪಂದನೆಯ ಕನ್ನಡಿ. ಈ ಎಸಳಿನ ನಂತರ ಒಂದು ವೈಶಿಷ್ಟ್ಯವನ್ನು ಹೇಳುವೆ. ಬೆಲ್ಲ ತಯಾರಿಸುವ ಕಾರ್ಖಾನೆಯಲ್ಲಿ ಕಬ್ಬಿನ ರಸ ಕುದಿಸುವಾಗ ಅದರ ಪರಿಮಳ ಊರೆಲ್ಲಾ ಹರಡುತ್ರೆ. ಕುದಿಸುತ್ತಾ ಅ ರಸ, ಪಾಕವಾಗಿ ಜೇನಿನಂತೆ ಮಂದ, ಸ್ನಿಗ್ಧ ದ್ರವವಾಗುತ್ತೆ. ಈ ಹಂತದಲ್ಲಿ ಅದಕ್ಕೆ ಕಬ್ಬಿನ ರಸದ ಎಲ್ಲಾ ಗುಣಗಳೂ ಇರುತ್ತವೆ,ಆದರೆ ಸಾಂದ್ರವಾಗಿರುತ್ತದೆ. ಹರಿಯುವ ಗುಣವೂ,ಪರಿಮಳವೂ,ಸಿಹಿಯೂ. ಈ ಹಂತದಲ್ಲಿ ಅದನ್ನು ಸಂಗ್ರಹಿಸಲು ಬಾಟಲಿ ಬೇಕು. ಇದರ ಮುಂದಿನ ಹಂತದಲ್ಲಿ ಅದನ್ನು ಗಟ್ಟಿಯಾಗಿಸಿ, ಅಚ್ಚಾಗಿಸಿ, ಆಕರ್ಷಕ ಪ್ಲಾಸ್ಟಿಕ್ ಕವರಿನೊಳಗೆ ಪ್ಯಾಕ್ ಮಾಡಿ ಮಾರುಕಟ್ಟೆಯಲ್ಲಿ, ಕಂಪೆನಿಯ ಬೆಲ್ಲದಚ್ಚಾಗಿ ಗ್ರಾಹಕರ ವಿಕ್ರಯದ ವಸ್ತುವಾಗಿ ಪ್ರಕಟವಾಗುತ್ತೆ.  ಕಮಲಾ ಅವರ ಗದ್ಯಗಂಧೀ ಕವಿತೆ ಬೆಲ್ಲದ ಅಚ್ಚು ಅಲ್ಲ. ಇದು ಸಾಂದ್ರವಾದ ಬೆಲ್ಲದ ಪಾಕ. ಇದಕ್ಕೆ ಹರಿವು,ಪರಿಮಳ, ರುಚಿ ಎಲ್ಲವೂ  ಇದೆ. ರೂಪ ಮಾತ್ರ ಪಾಕವನ್ನು ತುಂಬಿಸಿಕೊಂಡ  ಪಾತ್ರೆಯದ್ದೇ. ಗದ್ಯ ಗಂಧಿಯ ಇನ್ನೊಂದು ಎಸಳು ಹೀಗೆ ಆರಂಭವಾಗುತ್ತೆ. “ಅವಳು ಪುಟ್ಟವಳಿದ್ದಾಗ ಅಣ್ಣ ಕೊಟ್ಟ ನಾಲ್ಕಾಣೆ,ಎಂಟಾಣೆ ನಾಣ್ಯವನ್ನು ನೆಲದಲ್ಲಿ ಉರುಳಿ ಬಿಟ್ಟು ಎಷ್ಟು ದೂರ ಹೋಗುತ್ತದೆ ಎಂದು ನೋಡುತ್ತಿದ್ದಳು” ಈ ನಾಣ್ಯ, ಈ ನೆಲ, ಈ  ನಾಣ್ಯದ ಉರುಳು ಚಲನೆ,ಚಲಾವಣೆ ಏನನ್ನು ಧ್ವನಿಸುತ್ತೆ?. ಆಕೆಯ ಅಪ್ಪ , ಪ್ರೀತಿಯಿಂದ ನಾಣ್ಯವನ್ನು ಉರುಳಿಸಿ  ” ಅಂತಃಕರಣದ ನುಡಿಯನ್ನು ಹೀಗೇ ಉರುಳಿಸು. ಆ ಭಾಷೆ ಎಷ್ಟೋ ಜನಕ್ಕೆ ತಿಳಿದೇ ಇರುವುದಿಲ್ಲ. ಅದು ಅವರಿಗೆ ಅರ್ಥವಾಗದಿದ್ದರೂ ಸರಿ, ಉರುಳಿಸುತ್ತಾ ಹೋಗಬೇಕು, ಎಷ್ಟು ದೂರ ಸಾಧ್ಯವಾದರೆ ಅಷ್ಟು ದೂರ” ಉರುಳುವ ನಾಣ್ಯಕ್ಕೆ ಅಂತಃಕರಣದ ನುಡಿಯ ಸ್ವರೂಪ. ಕೊಡು ಕೊಳ್ಳುವಿಕೆಯ ಕ್ರಿಯೆಯಿಂದ, ಪ್ರೀತಿಯಲ್ಲಿ ಕರಗುವ, ಕರಗಿಸುವ, ದ್ರಾವಣದೊಳಗೆ ಒಂದೇ ಆಗುವ ಕ್ರಿಯೆ. ನೀರಲ್ಲಿ ಕರಗಿಸಿದ ಸಕ್ಕರೆಯ ಹಾಗೆ. ನೀರೂ,ಸಕ್ಕರೆಯೂ ಒಂದಕ್ಕೊಂದು ಅಂತಃಕರಣಿಸಿ ಸ್ವಂತ ರೂಪ ಕಳೆದು ಏಕಸ್ವರೂಪ ಹೊಂದಿದ ಹಾಗೆ. ಕೊನೆಯ ಸಾಲುಗಳಲ್ಲಿ ಮನಸ್ಸಿನ ಟ್ರಾನ್ಸ್ಫಾರ್ಮೇಟಿವ್ ಚೈತನ್ಯ ಪರಿಮಳಿಸುತ್ತೆ.  ” ಈಗ ನೀವು ನಿಮ್ಮೊಳಗಿನ ಯಾವ ನಾಣ್ಯವನ್ನಾದರೂ ಅವಳೆದುರಿಗೆ ಉರುಳಿಸಿ. ಎತ್ತಿಕೊಂಡು ಅಂತಃಕರಣದ ನುಡಿಯಾಗಿಸಿ ಉರುಳಿಬಿಡುತ್ತಾಳೆ” ಎಚ್ ನರಸಿಂಹಯ್ಯ ಅವರ ” ಹೋರಾಟದ ಹಾದಿ” ಪುಸ್ತಕದಲ್ಲಿ ಒಂದು ಘಟನೆಯಿದೆ. ಎಚ್. ಎನ್. ಅವರ ಗೆಳೆಯ ಮತ್ತು ಆತನ ಪುಟ್ಟ ಮಗು ಶಟಲ್ ಬ್ಯಾಡ್ಮಿಂಟನ್ ಆಡುತ್ತಿರುತ್ತಾರೆ. ಆ ಮಗು ಕೋರ್ಟ್ ನ ಎಡಭಾಗದಲ್ಲಿ ಇರುವಾಗ,ಎದುರಾಳಿ ಶಟಲ್ ಕಾಕ್ ಅನ್ನು ಕೋರ್ಟಿನ ಬಲಗಡೆಗೆ ಪ್ಲೇಸ್ ಮಾಡುತ್ತಾನೆ. ಮಗು ಕೋರ್ಟ್ನ ಬಲ ಭಾಗದಲ್ಲಿದ್ದರೆ ಎದುರಾಳಿ, ಶಟಲ್ ನನ್ನು ಕೋರ್ಟ್ ನ ಎಡ ಭಾಗಕ್ಕೆ ಹೊಡೆಯುತ್ತಾನೆ. ಮಗು ಬಹಳ ನೊಂದುಕೊಂಡು ಎಚ್. ಎನ್. ಹತ್ರ ಹೇಳುತ್ತೆ, “ಅಂಕಲ್! ಇದು ಚೀಟಿಂಗ್” ಅಂತ. ಇದು ಕೂಡಾ ಮಗುವಿನ ಪರಿಮಳ. ಅಂತಹಾ ಪರಿಮಳವನ್ನು ಮೇಟಿಕುರ್ಕೆ ಯ ಬಾಲ್ಯದ ದಿನದಿಂದ ನಾಗರಿಕ ಜಗತ್ತಿನ ಗಂಧಗಳ ನಡುವೆಯೂ ಉಳಿಸಿಕೊಂಡು, ಇಲ್ಲಿಯೂ ಅಲ್ಲಿಯೂ ಸಲ್ಲುವ ಮತ್ತು ಯಾವುದೇ ನಾಣ್ಯವನ್ನು ಅಂತಃಕರಣದ ನುಡಿಯಾಗಿ ಪರಿವರ್ತಿಸುವ ಕವಿತೆಗಳಿವು. ಕವಿತೆಯುದ್ದಕ್ಕೂ ಸ್ತ್ರೀ ಸಹಜ ಮಮತೆ, ಸಹನೆ, ಮಡಿಲಲ್ಲಿ ತುಂಬಿಕೊಳ್ಳುವ ಕ್ಷಮತೆ, ಹರಿಯುತ್ತಲೇ ಇರುವ ನಿರಂತರತೆ, ತನ್ನ ಗಾಯವಲ್ಲದೇ,ಇತರರ ಗಾಯಗಳನ್ನೂ ಸ್ಪರ್ಶಿಸಿ ಗುಣವಾಗಿಸುವ ಔಷಧೀಯ ಹಸ್ತದ ಮೃದುಲತೆ, ಇವೆಲ್ಲವನ್ನೂ ಚಿತ್ತಾರವಾಗಿಸಿದ್ದನ್ನು ಕಾಣಬಹುದು.  ಈ ಒಂದು ಚಿತ್ರವನ್ನು ಮನದಲ್ಲಿ ರೂಪಿಸಿಕೊಳ್ಳಿ. ಎರಡು ಗುಡ್ಡಗಳಿವೆ. ನಡುವೆ ಬಯಲು. ಒಂದು ಗುಡ್ಡದಲ್ಲಿ ಬಾಲ್ಯದ ಹಳ್ಳಿ, ಅಣ್ಣ ( ಅಪ್ಪ), ಅಮ್ಮ, ಮನೆ, ಕನ್ನಡಿ, ಕಲ್ಲುಗಳು, ತೆಂಗಿನ ಮರಗಳು, ಗಾಜಿನ ಬಳೆಗಳು, ಓಡಿದ ಓಣಿಗಳು, ಹೊಲಗಳು. ಸದಾ ಬೀಸುವ ಗಾಳಿ, ಪೋಸ್ಟ್ ಆಫೀಸ್, ನಕ್ಷತ್ರ, ಇವುಗಳೆಲ್ಲವೂ ಮಗುವಿನ ಪರಿಮಳದಂತೆ. ಮುಗ್ಧ, ನಿರ್ಮಲ, ನೇರ ನಿರಂತರ. ಭಾವ, ಮಮತೆ, ಜೀವಸಂಕುಲದ ಜತೆಗಿನ ತಾದಾತ್ಮ್ಯ ಸ್ಥಿತಿಗಳು ಈ ಗುಡ್ಡದ ತುಂಬಾ. ಎರಡನೆಯ ಗುಡ್ಡದಲ್ಲಿ, ಕಾರು, ಮೆಟ್ರೋ ರೈಲು, ಮುಖವಾಡಗಳು, ಕಲ್ಲು ಮನೆಗಳು, ಬೀಗ ಹಾಕಿದ ಬಾಗಿಲುಗಳು, ಸಿಮೆಂಟ್ ರಸ್ತೆಗಳು,  ತಾಜ್ ಮಹಲ್ ಗಳು ಮತ್ತು ಗಾಳಿಯೂ ಸ್ಥಿರವಾಗಿವೆ.  ಬಯಲಿನಲ್ಲಿ ಒಂದು ಸ್ಥಂಭದಲ್ಲಿ ಪೆಂಡುಲಮ್,ಈ ಎರಡು ಗುಡ್ಡಗಳ ನಡುವೆ ಓಲಾಡುತ್ತೆ. ಆ ಪೆಂಡುಲಮ್ನಲ್ಲಿ ಕವಯಿತ್ರಿ ಕುಳಿತಿದ್ದಾರೆ. ಪ್ರತೀ ಆಸ್ಸಿಲೇಷನ್, ಒಮ್ಮೆ ಮೊದಲ ಗುಡ್ಡದ ಹತ್ತಿರ, ಮತ್ತೆ ಎರಡನೇ ಗುಡ್ಡದ ಸಮೀಪ ಆಂದೋಳಿಸಿ  ತರುವ ಅನುಭೂತಿಯ ಸಂಕಲನವೇ ‘ಗದ್ಯಗಂಧೀ ಕವಿತೆಗಳು’. ********************************************** ಮಹಾದೇವಕಾನತ್ತಿಲ ಹುಟ್ಟಿದ್ದು, ಗಡಿನಾಡ ಜಿಲ್ಲೆ,ಕೇರಳದ ಕಾಸರಗೋಡು ಜಿಲ್ಲೆಯಲ್ಲಿ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ, “ಮೆಟೀರಿಯಲ್ಸ್ ಸೈನ್ಸ್” ನಲ್ಲಿ ಸ್ನಾತಕೋತ್ತರ ಪದವಿ, ಐ.ಐ.ಟಿ. ಮದರಾಸು, ವಿನಿಂದ ಭೌತಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದು, ಕಳೆದ ಎರಡು ದಶಕದಲ್ಲಿ, ಡಿ.ಆರ್.ಡಿ.ಒ. ಹೈದರಾಬಾದ್ ನಲ್ಲಿ, ವಿಜ್ಞಾನಿಯಾಗಿ ವೃತ್ತಿ. ಸಾಹಿತ್ಯ, ಓದು ಬರಹ, ಹಾಗೂ ಸಂಗೀತ ಹೃದಯಕ್ಕೆ,ಹತ್ತಿರ

Read Post »

ಕಾವ್ಯಯಾನ

ಕಾದಿದೆ ಮುಂಬೆಳಗು

ಕವಿತೆ ಕಾದಿದೆ ಮುಂಬೆಳಗು ಯಮುನಾ.ಕಂಬಾರ ಕಾದಿದೆ ಮುಂಬೆಳಗುಹೊಸ ವರುಷದ ಹೊಸ್ತಿಲಲಿಹುಡುಕುತ್ತಿದೆ – ತೆರೆದ ಬಾಗಿಲುಗಳಿಗೆ !! ತಡಕಾಡುತ್ತಿದೆ – ಕತ್ತಲಲಿಬಚ್ಚಿಟ್ಟ ಪ್ರೀತಿ ಸಹಕಾರಗಳಿಗಾಗಿದೂರಕೆ ಹರಿದ ಬೇರುಗಳು ಸಿಗದೇ – ನರಳುತಿದೆ !! ತನ್ನ ಕೈ ಕೊಸರುತಿದೆ – ಜಾತಿಯ ಜಾಲಗಳಲ್ಲಿ ಸಿಕ್ಕುವಾಗ್ವಾದ ನಡೆಸುತಿದೆ – ಮನುಷ್ಯನ ಬರುವು ನಿರ್ಗಮನ – ಕೇವಲ ಬರಿ ಮೈ ಎಂದು‌!! ತನ್ನ ಅಸ್ಮಿತೆ ಹಾಳಾಗದಿರಲೆಂದುರಾತ್ರಿ ಕಣ್ಣಾಗಿ ತೆರೆದುಕೊಂಡೇ ನಿಂತಿದೆ.ಶ್ರಮವು ವ್ಯರ್ಥವಾಗದಿರಲೆಂದುಮುಗಿಲಿಗೆ ಮುಖಮಾಡಿ ಗೋಳಿ ಡುತಿದೆ – ಈ ಬದುಕು ಶುಭವಾಗಲೆಂದು !! ತನ್ನ ಶಕ್ತಿ ಸಾಮರ್ಥ್ಯಗಳು ನಾಡ ಹಬ್ಬಕೆ ಎಂದುಮೂಡಲಿ ಕ್ಢಿತಿಯಲಿ ಹೊಸ ದಿಗಂತ ತೆರೆದುಒಂದಾದರೂ ಹೆಜ್ಜೆ ಗುರುತು ಉಳಿಯಲಿ ಎಂದು !!. ಬಹು ಆಸೆ ಹೊತ್ತು ಬಂದಹೊಂಗನಸುಹೂವಾಗಿ ಅರಳಲಿ ಎಂದು ಹಲಬುತಿದೆಹಣ ಅಧಿಕಾರಗಳ ಬಂಡೆ ಗಲ್ಲಿಗೆ ಸಿಕ್ಕಿಕೊಂಡು !! *********************************************

ಕಾದಿದೆ ಮುಂಬೆಳಗು Read Post »

ಕಾವ್ಯಯಾನ

ಹೊಸತು ಉದಯಿಸಲಿ

ಕವಿತೆ ಹೊಸತು ಉದಯಿಸಲಿ ಪ್ರತಿಮಾ ಕೋಮಾರ ನೋವ ಕರಿ ಛಾಯೆಹಿಡಿದೇ ಹೊಸ್ತಿಲೊಳಗೆ ಬಂದೆಅನುಕಂಪದ ಲವ ಲೇಷವೂಇಲ್ಲದೇ ಇಡೀ ವರುಷ ನಿಂದೆ ನಲಿವಿನ ಬಯಲಲ್ಲಿ ನೋವಿನಬೀಜವನು ಬಿತ್ತಿ ನೀರೆರೆದುಬಲವಾಗಿ ಬೆಳೆದೆಬೀಗಬೇಡ ಬಾಗು ಎಂಬಪಾಠ ಪ್ರತಿ ಎದೆಯೊಳಗೆ ಬರೆದೆ ಇಪ್ಪತ್ತರ ವರುಷಮಾಯವಾಗಿಸಿದೆ ಹರುಷಬದುಕು ಬೆಳಗಿಲ್ಲನಡೆಸಿದೆ ಕತ್ತಲೊಳಗೆಉಸಿರ ಬಿಗಿ ಹಿಡಿದು ಈಗ ಹೊರಟಿದ್ದೀಯಾದೊಡ್ಡ ಪಾಠವನು ಕಲಿಸಿಎಂದೂ ಎಚ್ಚರ ತಪ್ಪದ ಹಾಗೇಹಳೆಯಂಗಿ ಕಳಚಿಹೊಸದಾಗಿ ಕಾಲಿಟ್ಟ ಇಪ್ಪತ್ತೊಂದುತೊಳೆದುಬಿಡು ಹಳೆ ಕೊಳೆಯ ನೀರೆರೆ ತುಸು ಬತ್ತಿದ ಕನಸುಗಳಿಗೆಉದಯಿಸಲಿ ಹೊಸತು ಕಾಂತಿಎಲ್ಲರ ಕಂಗಳಲಿಗತವು ಮತ್ತೇ ಮರುಕಳಿಸದ ಹಾಗೇಹೊಸ ಹರುಷಕೆ ಮುನ್ನುಡಿ ಗೀಚಿಬಿಡು *******************************

ಹೊಸತು ಉದಯಿಸಲಿ Read Post »

ಪುಸ್ತಕ ಸಂಗಾತಿ

ಬೇಲಿಯೊಳಗಿನ ಬೆಳೆ –

ಪುಸ್ತಕ ಸಂಗಾತಿ ಬೇಲಿಯೊಳಗಿನ ಬೆಳೆ ಒಂದು ಅವಲೋಕನ ಬೇಲಿಯೊಳಗಿನ ಬೆಳೆ – ಪ್ರಬಂಧ ಸಂಕಲನ – ಡಾ. ಕೆ.ಚಿನ್ನಪ್ಪ ಗೌಡ – ಮದಿಪು ಪ್ರಕಾಶನ, ಮಂಗಳೂರು: ೨೦೨೦ ಪುಟ ೧೦೪, ಬೆಲೆ  ೯೦ ರೂ.  ಇದೊಂದು ‘ವಿಶಿಷ್ಟ’ ಸಪ್ತ ಪ್ರಬಂಧಗಳ ಸರಮಾಲೆ. ಯಾಕೆ ‘ವಿಶಿಷ್ಟ’ ಎಂದರೆ ಇಲ್ಲಿಯ ಏಳೂ ಲೇಖನಗಳು ‘ಪ್ರಬಂಧ’ ಎಂಬ ಒಂದೇ ಪ್ರಭೇದ ಸೂತ್ರಕ್ಕೆ ಒಳಪಡುವುದಿಲ್ಲ! ಇದನ್ನು ‘ಹರಟೆ’ ಎಂದು ಲೇಖಕರು ಕರೆದರೂ ಅದು ಹಳ್ಳಿ ಪಂಚಾಯ್ತಿಕಟ್ಟೆಯ ಸಮಯ ಕೊಲ್ಲುವ ಜಡಭರತರ ಹಾಳು ಹರಟೆಯಾಗದೆ ಓದುಗರ ಮನತಟ್ಟುವ, ಮುಟ್ಟುವ ಕಥನಗಳಾಗಿ ವಿಕಾಸಗೊಂಡಿದೆ. ಲೇಖಕರೇ ಹೇಳಿಕೊಳ್ಳುವಂತೆ “ಕೂಡೂರಿನ ನನ್ನ ಮನೆ ಮತ್ತು ವಿಟ್ಲದ ಆಸುಪಾಸಿನ ಜನರ ಬದುಕಿನ ಕೆಲವು ಸಾಂಸ್ಕೃತಿಕ ವಿವರಗಳನ್ನು ಈ ಬರಹಗಳಲ್ಲಿ ಸೃಜನಶೀಲವಾಗಿ ಸಂಘಟಿಸಿದ್ದೇನೆ…ನನ್ನ ಮನಸ್ಸಿನಲ್ಲಿ ಲುಪ್ತವಾಗದೆ ಸುಪ್ತವಾಗಿ ಅವಿತಿದ್ದ, ಆಗೊಮ್ಮೆ ಈಗೊಮ್ಮೆ ಜಿಗಿಯುತ್ತಿದ್ದ ನೆನಪುಗಳನ್ನು ಬಳಸಿ ಈ ಪ್ರಬಂಧಗಳನ್ನು ಕಟ್ಟಿದ್ದೇನೆ. ಈ ನೆನಪುಗಳು ನನಗೆ ಅಮೂಲ್ಯ…ನನ್ನ ಅನುಭವಗಳ ಮೇಲೆ ನನಗೆ ಪ್ರೀತಿ ಇದೆ, ವ್ಯಾಮೋಹವಿಲ್ಲ. ಹಿಂದಿನ ದಿನಗಳನ್ನು ವೈಭವೀಕರಿಸುವ ಉದ್ದೇಶ ನನಗಿಲ್ಲ.” ಲೇಖಕರಿಗಿರುವ ಈ ಎಚ್ಚರ ಇಲ್ಲಿನ ಪ್ರಬಂಧಗಳನ್ನು ನಾಸ್ಟಾಲ್ಜಿಕ್ ಆಗದಂತೆ, ಅಂದರೆ ವೃಥಾ ಗತಕಾಲಕ್ಕೆ ಹಂಬಲಿಸುವ ಗೀಳು ಆಗದಂತೆ ಕಾಪಾಡಿದೆ. ನಾನೂ ಇದೇ ಪರಿಸರದಲ್ಲಿ ಹುಟ್ಟಿ ಬೆಳೆದವನಾದುದರಿಂದ, ಲೇಖಕರ ಕೂಡೂರು ನನಗೂ ಆಪ್ತವಾದುದರಿಂದ, ಇದೆಲ್ಲದರ ಒಡನಾಟವೂ ನನಗಿದ್ದುದರಿಂದ ಈ ಮಾತನ್ನು ಗಟ್ಟಿಯಾಗಿ ಹೇಳಬಲ್ಲೆ ಯಾಕೆಂದರೆ ಈ ಅನುಭವಗಳಲ್ಲಿ ಹಲವನ್ನು ನಾನೂ ಕಂಡವನೇ!        ಶೀರ್ಷಿಕೆಯ ‘ಬೇಲಿ’ ಗತಕಾಲದ ನೆನಪುಗಳ ಬೆಳೆಯನ್ನು ಭದ್ರವಾಗಿ ಸಂರಕ್ಷಿಸಿಕೊಂಡು ಬಂದು ಕಟಾವಿಗೆ ಸಿದ್ಧವಾದ ಪಕ್ವತೆ ಸಾಧಿಸಿ ಪಾಕರಸಾಯನವಾಗಿ ನಮ್ಮ ಮುಂದೆ ತನ್ನನ್ನು ತಾನೇ ಅನಾವರಣಗೊಳಿಸಿಕೊಂಡಿದೆ. ಇಲ್ಲಿ ಗತಕಾಲವೆಂದರೆ ಬಾದರಾಯಣರಷ್ಟು ಹಿಂದೋಡದೆ ಕೇವಲ ‘ಸಂದ ಕಾಲ’ವಾಗಿ ಇಂದು-ನಿನ್ನೆಗಳನ್ನೂ ಒಳಗೊಂಡಿದೆ. ನಂಬಿದ ದೈವವೇ ‘ಬೇಲಿ’ಯಾಗಿ ನಂಬಿದವರನ್ನು ‘ಬೇಲಿಯೊಳಗಿನ ಬೆಳೆ’ಯಂತೆ ಪರಿಗಣಿಸಿ ದೈವ ಅಭಯ ನೀಡುವುದನ್ನು ಲೇಖಕರು ಹೀಗೆ ದಾಖಲಿಸುತ್ತಾರೆ: “ಬೇಲಿ ನಾನು. ಬೇಲಿಯೊಳಗಿನ ಬೆಳೆ ನೀವು. ಬಿತ್ತಿದ ಬೀಜ ನುಚ್ಚಾಗದಂತೆ ನೆಟ್ಟ ಸಸಿ ನಲುಗದಂತೆ ಕಂಬಳದ ಪೂಕರೆ ಮಾಲದಂತೆ ಬೋದಿಗೆ ಕಂಬ ಮುರಿಯದಂತೆ ನಂದಾದೀಪ ನಂದದಂತೆ ತೊಟ್ಟಿಲಿನ ಸರಪಳಿ ತುಂಡಾಗದಂತೆ ನಾನು ಸಾವಿರದ ಕಾಲದ ವರೆಗೆ ಕಾಯುತ್ತೇನೆ.” ಇದು ನಂಬಿದವರ ಪಾಲಿಗೆ ಒಂದು ಆಧಾರವಾಗಿ ಅವರ ಬಾಳನ್ನು ರೂಪಿಸಿದೆ ಎಂಬುದು ಸತ್ಯ.     ಕೊನೆಯ ಪ್ರಬಂಧ “ನೀವೇ ಯೋಚಿಸಿ ನೋಡಿ,’ ಪ್ರಚಲಿತ ಕೊರೊನಾ ಸಂಕಷ್ಟದ ಲಾಭ-ನಷ್ಟಗಳ ಲೆಕ್ಕಾಚಾರವನ್ನು ಕರಾರುವಾಕ್ಕಾಗಿ ನಡೆಸಿ ಭಗವದ್ಗೀತೆಯಲ್ಲಿ ಶ್ರೀ ಕೃಷ್ಣ ಅರ್ಜುನನಿಗೆ ಗೀತೆಯನ್ನು ಬೋಧಿಸಿದ ಮೇಲೆ ಹೇಳುವ ಮಾತುಗಳ ಮಾರ್ಮಿಕತೆ –- ‘ವಿಮೃಶ್ಯೈತದಶೇಷೇಣ ಯಥೇಚ್ಛಸಿ ತಥಾ ಕುರು’ (೧೮:೬೩) – ‘ನಾನು ಹೇಳಿದ್ದನ್ನೆಲ್ಲಾ ಚೆನ್ನಾಗಿ ಪರಾಂಬರಿಸಿ ಮತ್ತೆ ನಿನಗೆ ತೋಚಿದಂತೆ ಮಾಡು’ — ಎಂಬುದನ್ನು ಇಲ್ಲಿ ಓದುಗರಿಗೆ ಆರೋಪಿಸಿ ಅವರ ಜವಾಬ್ದಾರಿಯನ್ನು ಮತ್ತೆ ನೆನಪಿಸಿಕೊಳ್ಳುವಂತೆ ಮಾಡಿದೆ. ಕನ್ನಡದಲ್ಲಿ ಪ್ರಬಂಧ ಸಾಹಿತ್ಯದ ಹುಟ್ಟು, ಬೆಳವಣಿಗೆ, ಉತ್ಕೃಷ್ಟ ಮಾದರಿಗಳು ಇತ್ಯಾದಿಗಳ ಬಗ್ಗೆ ಇಲ್ಲಿ ಉಲ್ಲೇಖಿಸದೆ ನೇರವಾಗಿ ಪ್ರಬಂಧಗಳೊಂದಿಗೆ ಮುಖಾಮುಖಿಯಾಗುವ ಪ್ರಯತ್ನವಷ್ಟೇ ನನ್ನದು. ಈ ಪ್ರಬಂಧಗಳ ಬಗ್ಗೆ ಲೇಖಕರೇ ಒಂದಿಷ್ಟು ವಿವರಗಳನ್ನು ಹಂಚಿಕೊಂಡಿದ್ದಾರೆ. “ಬಹುಶಃ ನಾನು ನನ್ನದೇ ಪ್ರಬಂಧಗಳ ಬಗ್ಗೆ ಬರೆದದ್ದು ಹೆಚ್ಚಾಯಿತೋ ಏನೋ” ಎಂಬ ದಾಕ್ಷಿಣ್ಯವೂ ಅವರನ್ನು ಕಾಡಿದೆ! ‘ತರಂಗ’ ಯುಗಾದಿ ವಿಶೇಷ ಸಂಚಿಕೆಯಲ್ಲಿ ಪ್ರಕಟವಾದ ಈ ಸಂಕಲನದ ಮೊದಲ ಪ್ರಬಂಧ ‘ಕಾಗೆ ಕಾಲಿನ ಗೆಜ್ಜೆ’ಯ ಬಗ್ಗೆ ನಾನು ವೈಯಕ್ತಿಕವಾಗಿ ನೇರ ಚಿನ್ನಪ್ಪ ಗೌಡರಿಗೆ ಬರೆದ ಮಾತುಗಳನ್ನು, ಅಂತೆಯೇ ಇತರ ಓದುಗರ ಅಭಿಪ್ರಾಯಗಳನ್ನೂ ಲೇಖಕರು ಈ ಸಂಕಲನದಲ್ಲಿ ಉಲ್ಲೇಖಿಸುತ್ತಾರೆ. ಭೂತಕೋಲದ ಸಂದರ್ಭದಲ್ಲಿ ಭೂತ ಕಟ್ಟುವ ದೈವದ ಪಾತ್ರಿ ನೀಡುವ ಅಭಯ ಜನರು ನಂಬುವ ಭೂತದ್ದೋ, ಪಾತ್ರಿಯದ್ದೋ ಎಂಬ ಸಂದಿಗ್ಧ ಕೆಲವರನ್ನು ಕಾಡಿದೆ ಮತ್ತು ಈ ಕುರಿತು ಅವರು ಲೇಖಕರನ್ನು ಪ್ರಶ್ನಿಸಿಯೂ ಇದ್ದಾರೆ. ಇದಕ್ಕೆ ಭೂತಾರಾಧನೆಯ ಬಗ್ಗೆಯೇ ಕ್ಷೇತ್ರ ಕಾರ್ಯ ನಡೆಸಿ ಡಾಕ್ಟರೇಟ್ ಪದವಿ ಪಡೆದ ಜಾನಪದ ವಿದ್ವಾಂಸರೂ ಆಗಿರುವ ಚಿನ್ನಪ್ಪ ಗೌಡರು ಉತ್ತರಿಸುವುದು ಹೀಗೆ: “ಭೂತ ಇದೆ. ನಾನು ಎಷ್ಟೋ ಭೂತಗಳನ್ನು ನೋಡಿದ್ದೇನೆ. ಅವುಗಳನ್ನು ಕೆಲವರು ದೈವಗಳೆಂದೂ, ಈ ನೆಲದ ಸತ್ಯಗಳೆಂದೂ ಕರೆಯುತ್ತಾರೆ. ಅವುಗಳಿಗೆ ನಿತ್ಯ ಕೈಮುಗಿಯುತ್ತಾರೆ… ಇಷ್ಟೊಂದು ವಿಶ್ವಾಸವಿಟ್ಟು ಕಣ್ಣೆದುರಿನ ಭೂತಕ್ಕೆ ಕೈಮುಗಿಯುವಾಗ ಅದು ಇಲ್ಲ ಎಂದರೆ ಹೇಗೆ? … ಭೂತವನ್ನು ಪ್ರತಿನಿಧಿಸಿ, ಭೂತವೇ ಆಗಿಬಿಡುವ ಒಬ್ಬ ವ್ಯಕ್ತಿಯೇ ಇದ್ದಾನಲ್ಲ…ನೋಡಲು, ಮುಟ್ಟಲು, ಮಾತನಾಡಿಸಲು ಸಾಧ್ಯವಾಗುವ ‘ವ್ಯಕ್ತಿತ್ವ’ವನ್ನು ಅದಿಲ್ಲ, ಅದಲ್ಲ ಎಂದರೆ ಹೇಗೆ? ಹಾಗಾಗಿ ನನ್ನ ಮಟ್ಟಿಗೆ ಭೂತ ಇದೆ. ನಾನು ಆ ಸತ್ಯಗಳನ್ನು ಕಂಡಿದ್ದೇನೆ.” ನನ್ನ ವೈಯಕ್ತಿಕ ನಿಲುವೂ ಇದೇನೇ. ಈ ಕುರಿತು ನಾನು ಹೇಳಿದ್ದು: “ಅಗೋಚರ ಸತ್ಯದ ಸಾಕ್ಷಾತ್ಕಾರ ಭೂತದ ನಡೆಯಲ್ಲಿ, ನೇಮದ ಗುಂಗಿನಲ್ಲಿ ಕ್ಷಣಕಾಲ ವಿಜೃಂಬಿಸುವುದು ಸುಳ್ಳಲ್ಲ. ಸತ್ಯದರ್ಶನದ ವಿಧಿಯೇ ಹಾಗೆ… ಭಾವಕ್ಕೆ ತಿಳಿದರೂ, ಬುದ್ಧಿಗೆ ತರ್ಕಕ್ಕೆ ನಿಲುಕದ ಕಾರಣಿಕ ಅದು. ಒಂದು ಸಮುದಾಯಕ್ಕೆ, ಅದರ ಬದುಕಿಗೆ ಆಧಾರವಾಗಿ ನಿಂತು ಮುನ್ನೆಡೆಸುವ ಶಕ್ತಿ ಅದು. ಇದನ್ನು ಬೆರಗುಗಣ್ಣಿಂದ ನೋಡಿದರೇನೇ ಚೆಂದ… ದೈನಿಕದ ಬದುಕು ನಿಂತಿರುವುದು ನಂಬಿಕೆ, ವಿಶ್ವಾಸ, ಪ್ರೀತಿ, ಭಕ್ತಿ ಇತ್ಯಾದಿ ಸಂವೇದನೆಗಳ ಮೇಲೆ…” ಇಲ್ಲಿ ನಿಜವಾಗಿ ಕೆಲಸಮಾಡುವುದು ಕವಿ ಕೊಲೆರಿಜ್ ಹೇಳುವಂತೆ – willing suspension of disbelief – ಅಪನಂಬಿಕೆಯನ್ನು ಉದ್ದೇಶಪೂರ್ವಕವಾಗಿ ತಡೆಹಿಡಿದರೆ ಮಾತ್ರ ಸತ್ಯ, ಸೌಂದರ್ಯ ದೃಗ್ಗೋಚರವಾಗುತ್ತದೆ. ಅದು ಅರಿವಾಗುವುದು ಅಂತರಂಗದ ಆರ್ದ್ರತೆಯಲ್ಲಿ, ತಲ್ಲೀನತೆಯಲ್ಲಿ ಹಾಗೂ ಭಾವಪರವಶತೆಯಲ್ಲಿ. ತರ್ಕದಿಂದ ಬದುಕನ್ನು ಅಳೆಯಲಾಗದು, ಅಳೆಯಬಾರದು. ಸ್ತ್ರೀರೂಪವನ್ನು ಮಜ್ಜೆ, ಮಾಂಸ, ರಕ್ತಗಳೆಂದು ವಿಚಿಕಿತ್ಸಕ ದೃಷ್ಟಿಯಿಂದ ನೋಡಿದರೆ ಎಷ್ಟು ಆಭಾಸವಾದೀತು! ನಾಗಚಂದ್ರ ಕವಿ ವರ್ಣಿಸಿದ್ದನ್ನು ಬುದ್ಧಿಯಿಂದಲ್ಲ, ಭಾವದಿಂದ, ರಸೈಕ ದೃಷ್ಟಿಯಿಂದ ಗ್ರಹಿಸಬೇಕು, ಅಲ್ಲವೇ?   ಸ್ತ್ರೀ ರೂಪಮೆ ರೂಪಂ ಶೃಂ ಗಾರಮೆ ರಸಮತುಳ ಸುರತ ಗಂಧಮೇ ಗಂಧಂ l ಸಾರಸ್ಪರ್ಶಂ ಗುರುಕುಚ ಭಾರಸ್ಪರ್ಶಂಗಳಪ್ರಶಬ್ದಮೇ ಶಬ್ದಂ ll “ಕಟ್ಟುವುದಾದರೆ ಕಾಗೆ ಕಾಲಿಗೆ ಗೆಜ್ಜೆ ಕಟ್ಟಬೇಕು. ಕೋಳಿಯ ಕಾಲಿಗೆ ಗೆಜ್ಜೆ ಕಟ್ಟಿದರೆ ಮನೆಹಿತ್ತಿಲು ಸುತ್ತು ಬಂದೀತು. ನಿನ್ನ ಕಾಲಿಗೆ ಗೆಜ್ಜೆ ಕಟ್ಟಿದ್ದೇನೆ. ನಾಲ್ಕು ಊರು ಹಾರಾಡು” ಎಂದು ತಾಯಿ ಉಳ್ಳಾಲ್ತಿ ದೈವ ಲೇಖಕರಿಗೆ ಬೂಳ್ಯ (ಪ್ರಸಾದ) ಕೊಟ್ಟು ಹರಸುವುದು ಒಂದು ರೋಚಕ ಘಟನೆ. ಇದು ವಾಸ್ತವ ಹಾಗೂ ದೈವದ ಮಾಯಕದ ಲೋಕದ ನಡುವಿನ ಸೇತುವಾಗಿ ಚಿನ್ನಪ್ಪ ಗೌಡರ ನಿಜಜೀವನದಲ್ಲೂ ನಡೆದದ್ದು ಕೇವಲ ಕಾಕತಾಳೀಯವಲ್ಲ ಎಂಬುದು ನನ್ನ ದೃಢ ನಂಬಿಕೆ. ಇದರ ವಿವರಗಳಿಗೆ ನೀವು ಪ್ರಬಂಧವನ್ನೇ ಓದಬೇಕು. ‘ಪಾಚಕ್ಕನ ಗಂಡಾಂತರ’ದಲ್ಲಿ ಲೇಖಕರು ‘ಕೆಟ್ಟ ದೃಷ್ಟಿ’ಯ ಬಗ್ಗೆ ಬರೆಯುತ್ತಾರೆ. ಇಲ್ಲಿಯೂ ನಂಬಿಕೆ-ಅಪನಂಬಿಕೆಗಳ ಮಧ್ಯೆ ಒಂದು ತೆಳು ರೇಖೆ ಮಾತ್ರ ಇದೆ. ಮಗುವಿಗೆ ದೃಷ್ಟಿಯಾಗುವುದು, ದೃಷ್ಟಿ ತೆಗೆಯುವುದು ಇತ್ಯಾದಿ ನಮ್ಮ ಸಾಮಾಜಿಕ ಜೀವನದಲ್ಲಿ ಜಾತಿ, ಮತಗಳ ಭೇದವಿಲ್ಲದೆ ಅನೂಚಾನವಾಗಿ ಲಾಗಾಯ್ತಿಂದ ನಡೆದು ಬಂದಿರುವುದು ಸತ್ಯ ತಾನೇ? ಇಲ್ಲಿ ಪಾಚಕ್ಕನ ಕೆಟ್ಟ ದೃಷ್ಟಿಯನ್ನು ಅವಳು ಅನುಭವಿಸಿರಬಹುದಾದ ಸಂಕಟಗಳ ಮನೋವೈಜ್ಞಾನಿಕ ಹಿನ್ನೆಲೆಯಲ್ಲಿ ಚಿನ್ನಪ್ಪ ಗೌಡರು ಗ್ರಹಿಸಿರುವುದು ಅವರ ಸೂಕ್ಷ್ಮ ಸಂವೇದನೆಗೆ ಸಾಕ್ಷಿ ಎಂದು ನಾನು ತಿಳಿಯುತ್ತೇನೆ. ಈ ಸಂವೇದನೆಯೇ ಲೇಖಕರ ಬಾಯಿಯಿಂದ ಈ ಮಾತುಗಳನ್ನು ಹೇಳಿಸಿದೆ: “ಪಾಚಕ್ಕನ ಮಾತುಗಳನ್ನು ಕೇಳಿದ ಮೇಲೆ ನನಗೆ ಅವಳು ಕೆಟ್ಟವಳು ಅಂತ ಅನಿಸಲಿಲ್ಲ. ಅವಳ ಮನಸ್ಸನ್ನು ಕೆಡಿಸಿ ಅವಳನ್ನು ಕೆಟ್ಟವಳನ್ನಾಗಿ ಮಾಡಿದ್ದು ಯಾರು ಎಂಬ ಪ್ರಶ್ನೆ ನನ್ನನ್ನು ಕಾಡತೊಡಗಿದೆ. ಅವಳ ಒಳದನಿಗೆ ಸಮಾಜ ಕಿವಿಗೊಡಲಿಲ್ಲ. ಲಿಂಗ ತಾರತಮ್ಯ ಅವಳ ಸಂವೇದನೆಯನ್ನು ಕೊಂದಿದೆ. ಜಾತಿ, ಹೆಣ್ಣು, ಬಡತನ ಮೊದಲಾದ ನೆಲೆಗಳ ಸಾಮಾಜಿಕ ಅಸಮಾನತೆಗಳು ಪಾಚಕ್ಕನನ್ನು ತೀವ್ರವಾಗಿ ಕಾಡಿವೆ. ಅವಳದಲ್ಲದ ತಪ್ಪಿಗೆ ಅವಳನ್ನು ಹೊಣೆಗಾರಳನ್ನಾಗಿ ಸಮಾಜ ಮಾಡಿದೆ. ಅವಳ ಸ್ವಾತಂತ್ರ್ಯವನ್ನು ಸಮಾಜ ಕಸಿದಿದೆ. ಅವಳ ಮನಸ್ಸನ್ನು ಕೆಡಿಸಿದ ಕೆಟ್ಟ ಸಮಾಜವನ್ನು ದುರಸ್ತಿಗೊಳಿಸುವ ಕೆಲಸ ತುರ್ತಾಗಿ ಆಗಬೇಕಾಗಿದೆ ಅಂತ ನನಗನ್ನಿಸಿದೆ ಪಾಚಕ್ಕನ ಮಾತುಗಳನ್ನು ಕೇಳಿ.” ಇಂತಹ ಒಂದು ಸಮಾಜಶಾಸ್ತ್ರೀಯ ದೃಷ್ಟಿ ಇನ್ನೂ ಅನೇಕ ಪ್ರಚಲಿತವಿರುವ ಸಾಮಾಜಿಕ ಅನಿಷ್ಟಗಳ ನಿವಾರಣೋಪಾಯವಾಗಿ ಇಂದಿನ ತುರ್ತು ಹಾಗೂ ಇಂದಿಗೂ ಪ್ರಸ್ತುತ ಕೂಡಾ ಎಂದು ನನಗೆ ಅನಿಸುತ್ತದೆ. ಇದಕ್ಕೆ ಪೂರಕವಾಗಿ ಒಂದು ಮಾತು. ನಾನು ಬಾಲ್ಯಕಾಲದಲ್ಲಿ ಕೇಳಿದಂತೆ ವಿಟ್ಲ ಪೇಟೆಯಿಂದ ಅನತಿದೂರದಲ್ಲಿ ‘ಅಪ್ಪೇರಿಪಾದೆ’ ಎಂಬ ಬೃಹತ್ ಶಿಲಾಹಾಸುಬಂಡೆ ಇತ್ತಂತೆ. ಅದಕ್ಕೆ ವಿಶಾಲವಾದ ಬಿಳಿ ಬಟ್ಟೆಯನ್ನು ಮುಚ್ಚಿ, ಪಾಚಕ್ಕನಂತೆ ಬಿರುದೃಷ್ಟಿಗೆ ಹೆಸರುವಾಸಿಯಾದ ಮಹಿಳೆಯೊಬ್ಬರಿಗೆ ತೋರಿಸಿದಾಗ ‘ಬೆಳಗಾಗಿ ಇಷ್ಟು ಹೊತ್ತಾದರೂ ಇವನಿನ್ನೂ ಎದ್ದಿಲ್ಲವೇ?’ ಎಂದು ಕುಚೋದ್ಯದ ಮಾತನಾಡಿದಾಗ ಅವಳ ಬಿರುನುಡಿಗೆ ಇಡೀ ಹಾಸುಬಂಡೆಯೇ ಚಿಟಿ ಚಿಟಿಲೆಂದು ಸಾವಿರ ಹೋಳಾಗಿ ಹೋಯಿತಂತೆ ಎಂಬುದನ್ನು ನಾನು ಕೇಳಿ ಬಲ್ಲೆ! ಇದು ಸತ್ಯವೋ ಸುಳ್ಳೋ ಎನ್ನುವುದಕ್ಕಿಂತಲೂ ಅಂತಹ ಒಂದು ಸಾಧ್ಯತೆಯನ್ನು ಗುರುತಿಸಿದ ಜನಮಾನಸಕ್ಕೆ ‘ಕಲ್ಪನಾ ದಾರಿದ್ರ್ಯ’ ಎಂದೂ ಬಾರದು ಎಂಬುದಷ್ಟೇ ಮುಖ್ಯ ಎಂದು ನನಗನಿಸುತ್ತದೆ. ಸೃಜನಶೀಲ ಮನಸ್ಸು ಕಲ್ಪನೆ-ವಾಸ್ತವಗಳ ನಡುವಿನ ವ್ಯಾವಹಾರಿಕ ರೇಖೆಯನ್ನು ನಿರಾಕರಿಸುತ್ತದೆ, ಅಥವಾ ನಿವಾರಿಸುತ್ತದೆ ಎಂದರೆ ಹೆಚ್ಚು ಸಮಂಜಸವಾಗಬಹುದೇನೋ! ‘ಪಾಚಕ್ಕನ ಗಂಡಾಂತರ’ ಈ ಮಾತಿಗೆ ಪುರಾವೆ ಇದ್ದಂತಿದೆ. ‘ಕಳೆಂಜಿಮಲೆ’ ವಿಟ್ಲದ ಸರಹದ್ದಿನ ಕಾಡು. ಇದು ವಿಟ್ಲವಾಸಿಗಳ ಭಾವಕೋಶದ ಒಂದು ಅವಿಭಾಜ್ಯ ಅಂಗ ಎಂದರೆ ತಪ್ಪಾಗಲಾರದು. ನಾನೂ ಚಿಕ್ಕವನಾಗಿದ್ದಾಗ ಗೆಳೆಯರೊಂದಿಗೆ ಕಳೆಂಜಿಮಲೆಗೆ ಲಗ್ಗೆ ಇಟ್ಟವನೇ! ಅಲ್ಲಿಯ ಕಾಟು ಮಾವಿನ ಮರದ ಹಣ್ಣುಗಳನ್ನು, ಬೆಟ್ಟದ ನೆಲ್ಲಿಕಾಯಿ, ಪುನರ್ಪುಳಿ, ನೇರಳೆ, ಕುಂಟಲ ಹಣ್ಣುಗಳನ್ನು ಧಾರಾಳವಾಗಿ ತಿಂದವನೇ!! ಅಲ್ಲಿಯ ಬಕಾಸುರನ ಗುಹೆ, ನೆತ್ತರಕೆರೆ, ವಿಟ್ಲವೇ ಮಹಾಭಾರತದ ‘ಏಕಚಕ್ರ ನಗರ’ ಎಂಬ ನಂಬಿಕೆ ಇತ್ಯಾದಿಗಳಲ್ಲಿ “ಪುರಾಣ ಕಾವ್ಯಗಳು ಸ್ಥಳೀಯವಾಗುವ – ಥಿಯರಿ ಆಫ್ ಲೋಕಲೈಸೇಷನ್”ನ ಅದ್ಭುತವನ್ನು ಕಂಡವನೇ. ಚಿನ್ನಪ್ಪ ಗೌಡರು ಇವೆಲ್ಲವನ್ನೂ ಮನಮುಟ್ಟುವಂತೆ, ಅತಿರಂಜಕತೆಯ, ಅತಿಭಾವುಕತೆಯ ಅಪಾಯದ ಸೆಳೆತವನ್ನು ಮೀರಿ ವರ್ಣಿಸಿರುವುದು ನಿಜಕ್ಕೂ ಶ್ಲಾಘನೀಯ. ಕಾಡು ಮತ್ತು ಮನುಷ್ಯ ಸಮಾಜದ ನಡುವಿನ ಅವಿನಾಭಾವದ ನೆಂಟಿನ ಗಂಟನ್ನು ಸುಕ್ಕುಗಟ್ಟದಂತೆ ಬಿಡಿಸಲು ಚಿನ್ನಪ್ಪ ಗೌಡರು ಶಕ್ತರಾಗಿದ್ದಾರೆ. ಕಳೆಂಜಿಮಲೆ ಒಂದು ರಕ್ಷಿತಾರಣ್ಯ. ಇಲ್ಲಿ ಹೆಚ್ಚಾಗಿ ಹೆಂಗಸರು ಒಣಸೌದೆ ಆರಿಸಿ ಗಂಟು ಕಟ್ಟಿ ತಲೆಯ ಮೇಲೆ ಹೊತ್ತು ತಂದು ಮಾರಾಟ ಮಾಡುವುದೋ, ಸ್ವಂತಕ್ಕೆ ಬಳಸುವುದೋ ಸದಾ ನಡೆದೇ ಇತ್ತು. ಅಂತೆಯೇ ಕರ್ನಾಟಕದಿಂದ ಸಮೀಪದ ಕೇರಳಕ್ಕೆ ಅಕ್ಕಿ ಸಾಗಾಟ ನಿರ್ಬಂಧ ಇದ್ದ ಕಾಲದಲ್ಲಿ ಹಲವು ಸಾಹಸಿಗರು ರಾತ್ರಿ ಕಳೆಂಜಿಮಲೆ ದಾರಿಯಾಗಿ ಕೇರಳಕ್ಕೆ ಅಕ್ಕಿ ಸಾಗಾಟ ಮಾಡಿ ದುಡ್ಡು ಮಾಡಿದ್ದೂ, ಕಾನೂನುಪಾಲಕರೊಂದಿಗೆ ಎಗರಾಡಿದ್ದೂ  ಗೊತ್ತು. ಇದೆಲ್ಲಾ ನನ್ನ ಬಾಲ್ಯಕಾಲದ ನೆನಪುಗಳಲ್ಲಿ ಹುದುಗಿವೆ. ಕಳೆಂಜಿಮಲೆ ಒಂದು ರೀತಿಯಲ್ಲಿ ನಿಗೂಢವೂ ಆಗಿ ಜನಜೀವನಕ್ಕೆ ಸಹಾಯಕವಾಗಿಯೂ ಒದಗಿದ ಕಾಲವೊಂದಿತ್ತು. “ಈ ಕಳೆಂಜಿಮಲೆಯ ಒಡಲಲ್ಲಿ ಏನಿದೆ, ಏನಿಲ್ಲ ಎಂಬುದು ಸರಿಯಾಗಿ  ಯಾರಿಗೂ ಗೊತ್ತಿಲ್ಲ. ನಮ್ಮ ಊರಿನ ಸಂಸ್ಕೃತಿ ಮತ್ತು ಈ ಕಾಡಿನ ಪ್ರಕೃತಿಯ ನಡುವೆ ಸಂಘರ್ಷ ಮತ್ತು ಸಮನ್ವಯ ನಡೆಯುತ್ತಾ ಬಂದಿರುವುದಂತೂ ನಿಜ” ಎಂದು ಚಿನ್ನಪ್ಪ ಗೌಡರು ಗುರುತಿಸುತ್ತಾರೆ. ಇಂತಹ ಕಳೆಂಜಿಮಲೆಗೆ ಈಗ ಬಂದಿರುವ ದುಸ್ಥಿತಿಯನ್ನು ಲೇಖಕರು ಎಳೆ ಎಳೆಯಾಗಿ ಬಿಡಿಸಿ ವಿವರಿಸುವಾಗ ಅವರೊಂದಿಗೆ ಓದುಗರೂ ವಿಷಾದಯೋಗಕ್ಕೆ ಜಾರುತ್ತಾರೆ: “ರಕ್ಷಿತಾರಣ್ಯವಾಗಿದ್ದ ಈ ಕಳೆಂಜಿಮಲೆ ಈಗ ರಕ್ಷಣೆಯಿಲ್ಲದೆ ಬಳಲುತ್ತಿದೆ. ಪಶ್ಚಿಮ ಘಟ್ಟವೇ ಸೂರೆಹೋಗಿರುವಾಗ ಈ ಪುಟ್ಟ ಕಳೆಂಜಿಮಲೆ ಏನು ತಾನೇ ಮಾಡಲು ಸಾಧ್ಯ. ಬಕಾಸುರನ ಗುಹೆಯ ಬದಿಯಿಂದಲೇ

ಬೇಲಿಯೊಳಗಿನ ಬೆಳೆ – Read Post »

ಕಾವ್ಯಯಾನ

ಶ್ರಮಿಕ

ಕವಿತೆ ಶ್ರಮಿಕ ಡಾ.ಜಿ.ಪಿ.ಕುಸುಮ, ಮುಂಬಯಿನನ್ ತಾಯಿ….ನೀ ಗೆಲ್ಲಬೇಕೆಂದುನಾ ನಿಂತೆ ಒಳಗೆ.ದೂರ ದೂರದವರೆಗೆಯಾರೂ ಇಲ್ಲ ಹೊರಗೆ.ಗಲ್ಲಿಗಲ್ಲಿಗಳಲ್ಲಿ ಮೌನ ಮಲಗಿದೆಮಣ್ಣು ಒಣಗಿದೆ.ನನ್ನೆದೆ ಗೂಡು ಒದ್ದೆಯಾಗ್ತಿದೆನಿನ್ನ ಬಿಟ್ಟು ಹೋಗೊಕಾಗಲ್ಲಹೋದ್ರೆ ಹೋದಲ್ಲಿಬದುಕೋಕಾಗಲ್ಲ.ನನ್ನ ದಿನ, ನನ್ನ ರಾತ್ರಿನನ್ನ ಸೋಲು, ನನ್ನ ಗೆಲುವುಎಲ್ಲವೂ ನೀನೆ..ನೀ ಯಾವತ್ತೂ ಹೀಗೆಮನೆಬಾಗಿಲು ಮುಚ್ಕೊಂಡುಮೂಕಿಯಾಗಿದ್ದಿಲ್ಲ.ಅಂಗಾಂಗ ಸುಟ್ಟುಕೊಂಡಾಗ್ಲೂಮಳೆನೀರು ಮುಳಗಿಸಿದಾಗ್ಲೂಭಯ ಗೆದ್ದಿಲ್ಲ…ಇದೀಗ ಏನಾಯ್ತೋ ತಾಯಿಕಾಣದ ವೈರಿಗೆಎಷ್ಟೊಂದು ಸೊರಗಿದೆ.ಹಳಿತಪ್ಪಿದೆ ನೋಡು ಬದುಕಬಂಡಿಸ್ವಪ್ನನಗರಿಯಲ್ಲೀಗಬದುಕು ಘಮಘಮಿಸುವುದಮರೆತಿದೆ.ಬರಿಗಾಲಲಿ ಬರಿಕಿಸೆಯಲಿಬರಿಹೊಟ್ಟೆಗೆ ಕೈಯನಿಟ್ಟುನೆತ್ತಿಮೇಲೆರಡು ಪ್ಯಾಂಟು ಶರ್ಟುರಾಶಿ ಬಿಸಿಲ ಸೀಳಿಕಾಲನ್ನೆತ್ತಿ ಹಾಕುತಸಾಗ್ತೇನೆ ನಾನುಹೊಸ ಕನಸುಗಳ ನೇಯಲುತೀರ ಬಿಟ್ಟುಸಾಗರವ ದಾಟಲು. ***************************

ಶ್ರಮಿಕ Read Post »

ಕಾವ್ಯಯಾನ

ಹುನ್ನಾರ

ಕವಿತೆ ಹುನ್ನಾರ ಡಾ.ಸುರೇಖಾ ರಾಠೋಡ ಕಾಲಲಿ ಗೆಜ್ಜೆ ಹಾಕಿನನ್ನ ಚಲನವಲನನಿಯಂತ್ರಿಸುವಹುನ್ನಾರ ನಿನ್ನದು ಕೊರಳಲಿ ತಾಳಿ ಕಟ್ಟಿನನ್ನ ತಾಳ್ಮೆಪರೀಕ್ಷಿಸುವಹುನ್ನಾರ ನಿನ್ನದು ಕೈಯಲ್ಲಿ ಕೈ‌ಬಳೆ ತೊಡಿಸಿಏನು ಮಾಡದಂತೆಕೈಕಟ್ಟಿ ಹಾಕುವಹುನ್ನಾರ ನಿನ್ನದು ಹಣೆಗೆ ನಿನ್ನ ಹೆಸರಿನಕುಂಕುಮವ ಹಚ್ಚಿಸಿಹಣೆಯ ಬರಹವೆನಿನ್ನದಾಗಿಸಿಕೊಳ್ಳುವಹುನ್ನಾರ ನಿನ್ನದು ಕಾಲಿನ ಬೆರಳುಗಳಿಗೆಕಾಲುಂಗುರವ ತೊಡೆಸಿನಡೆಯನ್ನೆ ಕಟ್ಟಿ ಹಾಕುವಹುನ್ನಾರ ನಿನ್ನದು ಎಲ್ಲವ ತೊಡಿಸಿಕಟ್ಟಿ ಹಾಕಿರುವೇ ಎಂದುನೀ ಬಿಗುತ್ತಿರುವಾಗ …ನನ್ನ ಮನಸ್ಸನ್ನುಕಟ್ಟು ಹಾಕಲುಸಾಧ್ಯವೇ?… *********************************************************

ಹುನ್ನಾರ Read Post »

You cannot copy content of this page

Scroll to Top