ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಮುಖವಾಡದ ಬದುಕು

ಕವಿತೆ ಮುಖವಾಡದ ಬದುಕು ರೇಷ್ಮಾ ಕಂದಕೂರು ಎಲ್ಲೆಲ್ಲೂ ಮುಖವಾಡದ ರಾರಾಜಿಸುವಿಕೆಎತ್ತ ನೋಡಿದರತ್ತ ಆಸೆ ಆಮಿಷ ದ ಸುಳಿಹೊರಬರಲು ಹೆಣಗುವ ಜೇಡನಂತೆಕರುಬುವರೂ ತಟಸ್ಥವಾಗಿಹರು ನಾನು ಮೊದಲಿನಂತಿಲ್ಲಗೊಂದಲದ ಗೂಡಿನಡಿ ನನ್ನ ಸೂರುಅನಿವಾರ್ಯತೆ ಬದುಕಿಗೆಸುಖ ಮಾತ್ರ ಬೇಕೆಂಬ ಅಹವಾಲು ಹಿಯಾಳಿಸುವ ಕೊಂಕು ನುಡಿಬೆನ್ನಿಗೆ ಇರಿಯಲು ಸರತಿ ಸಿಲುತೃಪ್ತಿಯಂತೂ ಹೊಸ್ತಿಲು ಆಚೆಕೃತಕತೆಯ ನಗುಮಾತ್ರ ಎದ್ದು ನಿಂತಿದೆ ತುಳಿಯುದಕೂ ದುಂಬಾಲು ಬಿದ್ದಿಹರುನೇಸರು ಉಗುಳುವ ಒಮ್ಮೊಮ್ಮೆ ಬೆಂಕಿಯುಂಡೆತಣ್ಣನೆಯ ಗಾಳಿಗೂ ಸಂಚಕಾರ ಹೂಡಿಕಟು ಮನದ ಇರಿತದಿ ಬಳಲಿ ಬೆಂಡಾಗಿಹೆ ನಾನಷ್ಟೇ ಎಂಬ ಗಿರಿಗಿಟ್ಟಲೆ ತಿರುಗಿಬಂದ ಕೆಲಸ ಮರೆತ ಹಾಗಿದೆಸವೆಯುವ ದಿನಗಳ ಆಸ್ವಾದನೆಯಹೊರಡುವ ಗಳಿಗೆಯಲಿ ಅಲ್ಲೋಲ ಕಲ್ಲೋಲ ನಗುವಿನ ಅಲೆಗೂ ಉಗ್ರ ಪ್ರಲಾಪಮಗುವಿನ ಮನಸು ವಿಶ ಪ್ರಾಶಾನಸೋಗಿಗೆ ಮಹತ್ವ ನೀಡಿಆಂತರ್ಯದ ಸಂತೋಷ ಮರೆಮಾಚಿದೆ ಮುಖವಾಡದ ಬದುಕಿದುಮೂರ್ಖರ ಮಾತಿಗೆ ಮಣೆ ಹಾಕುತಧೂರ್ತರ ಹಿಡಿತದಿ ಸಾಗಿಸುಮೂಹೂರ್ತವು ಕಾಣದಾಗಿದೆ. ಸಾವಿರಾರು ಗಾಯಗಳು ಎದೆಯ ಗೂಡಿನಡಿಕುಡಿ ನೋಟದಲಿ ಬಾಹ್ಯಾಡಂಬರಮುಡಿಗೆ ಮಲ್ಲಿಗೆ ಹಾರಮಡಿಲಲಿ ಹಗೆಯ ಬುತ್ತಿಯ ಹೊತ್ತಿದೆ. ***************************************

ಮುಖವಾಡದ ಬದುಕು Read Post »

ಕಾವ್ಯಯಾನ

ನಾವು ಹೀಗೆಯೆ

ಕವಿತೆ ನಾವು ಹೀಗೆಯೆ ನಿರ್ಮಲಾ ಶೆಟ್ಟರ್ ಇಂದಿಲ್ಲವಾದರೆ ನಾಳೆಈಗ ಆಗ ಆಮೇಲೆ ಎಂದುಅಸಂಖ್ಯ ಹಗಲು ನಾನೇ ಬೇಯುತರಾತ್ರಿಗಳಲಿ ದೀಪದಂತೆ ಉರಿಯುತ ಕಾದಿದ್ದೇನೆನಿನ್ನ ಮಾತುಗಳ ಕೇಳಲುಆ ವಿಷಯದಲಿ ಜುಗ್ಗ ನೀನು ಮತ್ತುನಿನ್ನಂಥಹ ಎಲ್ಲರೂ ಇದೇ ಕಾರಣಅವ್ವ ಅಪ್ಪನೊಡನೆ ಸೆಟಗೊಂಡುನನ್ನ ಪಕ್ಕದಲಿ ಬಂದು ಮಲಗಿದಅದೆಷ್ಟೊ ರಾತ್ರಿಗಳ ಪ್ರಶ್ನಿಸುತ್ತಾ ಬೆಳದವಳು ನಾ ಮೊನ್ನೆ ವನಿತೆಊರ ಹೊರಗಿನ ನಡುರಸ್ತೆಯಲಿಬಿಟ್ಟು ತನ್ನವನನುಒಂಟಿಯಾಗಿನಡೆದು ಮನೆಸೇರಿ ಕ್ರಮಿಸಿದ್ದು ಸಮೀಪದ ಹಾದಿಯನ್ನಲ್ಲ ನಾವು ಹೀಗೆಯೆಇಂಥವರನ್ನು ಇಷ್ಟಪಡುವುದಿಲ್ಲ ಒಂದೇ ಗುಟುಕಿಗೆ ಚರಿಗೆ ನೀರು ಕುಡಿದಂತೆನಿಮ್ಮೆದೆಯ ಭಾವವನೆಲ್ಲ ನಮ್ಮೆದೆಗಿಳಿಸಿಕಣ್ಣರೆಪ್ಪೆಯಲಿ ತೂಗಾಡಿಸಿಕೊಂಡುತೊಟ್ಟಿಲು ಕಟ್ಟಿ ಹಾಡುವ ಜೋಗುಳಗಳತಲೆಮಾರಿಗೂ ದಾಟಿಸುತ್ತೇವೆ ನಿಮ್ಮ ಕೈ ಬೆರಳುತುಟಿಯ ಸೀಳು ಒರಟು ಗಲ್ಲಬಿರುಸು ಪಾದಗಳೊಡನೆಹಾ ಹುಂ ಹೋ ಗಳಲಿ ಮುಗಿಸುವ ಮಾತುನಿನ್ನೆ ಇಂದು ನಾಳೆಗ್ಯಾವತ್ತು ನಮಗೆ ಮುದವೆನಿಸುವುದಿಲ್ಲ ಇನ್ನಾದರೂಮುಖಕ್ಕೆ ಮುಖ ಕೊಟ್ಟುಕಣ್ಣಲಿ ಕಣ್ಣ ನೆಟ್ಟು ಮಾತಾಡುತ್ತಲಿರಿಹಗಲ ಬೆಳಕಿನಲಿ **************

ನಾವು ಹೀಗೆಯೆ Read Post »

ಇತರೆ, ವರ್ತಮಾನ

ಹೀಗೊಂದು ಚಿಂತನೆ.

ಚಿಂತನೆ ಹೀಗೊಂದು ಚಿಂತನೆ. ಗೋನವಾರ ಕಿಶನ್ ರಾವ್ “What is wonderful about great literature is that it transforms the man who reads it towards the condition of the man who wrote, and brings to birth in us also the creative impulse. ~E.M. Forster“ ಬೆಳಗಾಗೆದ್ದು ಕೈಯಲ್ಲಿ ಕಾಫಿ ಕಪ್ಪು ಹಿಡಿದು, ಅಂದಿನ ದಿನ ಪತ್ರಿಕೆ, ತಿರುವಿ ಹಾಕುತ್ತಿದ್ದೇವೆ ಎಂದು ಭಾವಿಸಿಕೊಳ್ಳಿ. ಪುಟ ತಿರುವುತ್ತ ಹೋಗುತ್ತೀದ್ದೀರಿ,ಅಲ್ಲೊಂದು ಕೊಲೆ,ಇಲ್ಲೊಂದು ಸಾವು,ಮಗದೊಂದು ಪುಟದಲ್ಲಿ ಅಪಘಾತ. ಎಲ್ಲದಕ್ಕೂ ನಿರ್ಲಿಪ್ತ ಭಾವ.ಪತ್ರಿಕೆ ಪಕ್ಕಕ್ಕಿಟ್ಟು ಮೊಬೈಲ್ ಕೈಗೆತ್ತಿಗೊಳ್ಳುವಿರಿ ಸಾಮಾಜಿಕ ಜಾಲತಾಣದಲ್ಲಿ ಒಂದು ಸಂದೇಶ. ಶ್ರೀ……….. ಯವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.ಅನೇಕರ ಮರು ಸಂದೇಶಗಳು.ನೀವು ಸಹ ಒಂದು ಓಂ ಶಾಂತಿ ಎಂದು ಟಂಕಿಸಿ ಮುಂದೆ ಸಾಗುವಿರಿ.ಅಲ್ಲಿಯೂ ನಿರ್ಲಿಪ್ತ ಮನೋಭಾವ ! ಯೋಚಿಸಿ ನೋಡಿ. ಒಂದು ಸಾವಿನ ಸುದ್ದಿ ಮೂರು ವಿಧದ ಪರಿಣಾಮ ಬೀರುತ್ತದೆ ಅಲ್ಲವೆ ? ಸದರಿ ಶ್ರೀ ಯವರ ನಿಧನಕ್ಕೆ ನೇರ ಪರಿಣಾಮ ಹೊಂದಿದವರು ಅವರ ಹತ್ತಿರದ ದೂರದ ಸಂಬಂಧಿಕರು.ಎರಡನೆಯವರು ಆಪ್ತವಲಯ.ಅವರು ಸಾಧ್ಯವಾದರೆ, ದಹನ ಕಾರ್ಯದಲ್ಲಿ ಭಾಗಿಗಳಾಗುವರು. ಅನಾನುಕೂಲ, ಅನಾರೋಗ್ಯದಂತಹ ಬಲವಾದ ಕಾರಣಗಳಿದ್ದರೆ,ದೂರವಾಣಿಗಳ ಮುಖಾಂತರ ಸಂಪರ್ಕಿಸಿ ಸಂತಾಪ ಸೂಚಿಸುವರು.ಈ ಮೂರರನ್ನು ಮೀರಿದವರಿರುತ್ತಾರೆ.ಏನೂ, ಸಂಬಂಧ​ವಿಲ್ಲದವರು. ಪ್ರಪಂಚದ ಒಳಿತು-ಕೆಡುಕುಗಳ ಗೋಜು ಅವರಿಗೆ ಬೇಕಿಲ್ಲ.ತಮ್ಮ ಪಾಡಿಗೆ ತಾವು ಒಂದು ಗುಡ್ ಮಾರ್ನಿಂಗ್, ಗುಡ್ ಇವನಿಂಗ್ ಸಂದೇಶ ಹಾಕುತ್ತ ಹೋಗುತ್ತಿರುತ್ತಾರೆ.ವಿಚಿತ್ರ ಅಲ್ಲವೇ ಯಾಕೆ ಹೀಗೆ ? ಶ್ರೀ ಯವರ ಹೃದಯಾಘಾತದಿಂದ ದಿಂದ ಅವರ ಸಂಬಂಧಿಕರಿಗೆ ಮಾತ್ರ ಕೆಟ್ಟ ಸುದ್ದಿ. ಉಳಿದ ಕೆಲವರಿಗೆ ಅದು ಸುದ್ದಿಯೇ ಅಲ್ಲ.ನಗರದ ಯಾವುದೇ ವಿಸ್ತರಣೆಯಲ್ಲಿ ಉಂಟಾದ ಸಾವಿನ ಸುದ್ದಿ ನಮ್ಮಲ್ಲಿ ಅನೇಕರನ್ನು ನಿರ್ಭಾವುಕರನ್ನಾಗಿ ಮಾಡಬಲ್ಲದು. ಮನಸ್ಸಿಗೆ ಆಪ್ತವಾದ ಕೃತಿಗಳನ್ನು ಕುರಿತು ಯೋಚಿಸುವಾಗ, ಉದಾಹರಣೆಗೆ ಮಹಾಭಾರತ,ರಾಮಾಯಣ ಕಾವ್ಯಗಳಲ್ಲಿ, ಕುಂತಿ ಬೀರಿದ ಪ್ರಭಾವ ಮಾದ್ರಿ ಬೀರಲಿಲ್ಲ. ಸೀತೆ, ದ್ರೌಪದಿ, ಪ್ರಾಮುಖ್ಯರಾದಷ್ಟು ಊರ್ಮಿಳೆ, ಮಾಂಡವಿ,ಶೃತಕೀರ್ತಿ ಆಗಿಯೇ ಇಲ್ಲ. ಊರ್ಮಿಳೆಯ ಹೆಸರು ಅಲ್ಲಿ ಇಲ್ಲಿ ಒಂದಷ್ಟು ಚರ್ಚಿತವಾಗಿದ್ದರೆ, ಮಾಂಡವಿ ಶೃತಕೀರ್ತಿ ಹೆಸರು ಬಹಳಷ್ಟು ಜನ ಕೇಳಿಯೂ ಇರಲಿಕ್ಕಿಲ್ಲ. ಅಭಿಮನ್ಯುವಿನ ಸಾವಿನಷ್ಟು ಘಟೋತ್ಕಚನ ಸಾವು ಕಾಡಿಲ್ಲ. ಉಪಕಾರ್ ಚಿತ್ರದ ನಾಯಕ ಮನೋಜ ಕುಮಾರನ ಮೇಲೆ ತೋರಿದ ಪ್ರೀತಿ ಅನುಕಂಪ ನಮ್ಮ ಊರಿನ ರೈತನ ಮೇಲೆ ತೋರಿದ್ದೇವೆಯೇ ? ಉಹೂಂ! ಸಂದೇಹಗಳ ಸರ ಮಾಲೆ !! ಬೇಂದ್ರೆಯವರ ಕವಿತೆ ‘ರಾಮಾಯಣ’ದ ಈ ಸಾಲುಗಳನ್ನು ನೋಡಿ. ಲಕ್ಷ್ಮಣನಿಗೆ ವನವಾಸವು,ಉರ್ಮಿಳೆ ಕುರುಡುಗಳೆದ ಕ್ಷಣಕ್ಷಣಾ | ಬರಲಿಲ್ಲವು ಲೆಕ್ಕಕ್ಕೆ ವರುಷಗಳು ಹದಿನಾಲ್ಕು ಭಣಭಣಾ| ಭರತನು ಕಣ್ಣಿಗೆ ಕಾಣುವ ಅಳತೆಯೊಳಿದ್ದನು ತಾ ದಿನದಿನಾ| ತಪವು ಭರತಗೂ ಮಾಂಡವಿಗೂ ತಪ, ವಿರಹವೇ ಪಾರಾಯಣಾ | ಶತೃಘ್ನನು ಅರಮನೆಯೊಳಗಿದ್ದರೂ ಶೃತಕೀರ್ತಿಗೂ ರಣರಣಾ | ರಾಮನ ವಿರಹವು ಸೀತಾವಿರಹವು ತುಂಬಿದೆ ರಾಮಾಯಣಾ || ಸಣ್ಣವರತ್ತರೆ ಎಣಿಕೆಗೆ ಬಾರದು ಅಯ್ಯೋ ನಾರಾಯಣಾ || ಸಾಹಿತ್ಯ ಸಂಜೀವಿನಿ ಎಂದರೆ, ಬೇಂದ್ರೆ. ನಮ್ಮೆಲ್ಲರ ಪ್ರತಿ ಸಂದೇಹಗಳಿಗೆ, ಬೇಂದ್ರೆಯವರಲ್ಲಿ ಅವರ ಕವಿತೆಗಳಲ್ಲಿ ಮದ್ದಿದೆ.ಅದು ಬೇಂದ್ರೆ ತಾಕತ್ತು! ಸಾಹಿತ್ಯದ ತಾಕತ್ತು.ನಮ್ಮ ನೋವಿನ ಸಂಗತಿಗಳು ನಮಗೆ ಯಾವಾಗಾದರೂ ಸುಖವಾಗಿ-ಸುಂದರವಾಗಿ ಕಂಡಿವೆಯಾ ? ಅಥವಾ ಅವುಗಳನ್ನು ನಾವು, ಸುಖಿಸಿದ ನೆನಪಿದೆಯೇ ? ಇಲ್ಲವೆಂದಾದಲ್ಲಿ ಭಾರತದ ‘ದ್ರೌಪದಿ’,ರಾಮಾಯಣದ ‘ಸೀತೆ’,ಭಾಗವತದ ‘ಕಯಾದು’ ನಮಗೆ ಯಾಕೆ ಹತ್ತಿರವಾಗುತ್ತಾರೆ. ಈ ಕತೆಗಳು ಸಾಹಿತ್ಯಿಕವಾಗಿ ಸುಂದರ ಎನಿಸಿಕೊಂಡು ಓದಿಸಿಕೊಂಡು ಹೋಗುತ್ತವೆಯೇ ? ಯಾಕಿದ್ದೀತು? ಅದು ಸಾಹಿತ್ಯಕ್ಕಿರುವ ಸಶಕ್ತ ಪದಜಾಲ.ಮತ್ತದರಲ್ಲಿ ಅಡಕವಾಗಿರುವ ಸತ್ಯ.ಸ್ಪಷ್ಟವಾಯಿತಲ್ಲ ! ಒಂದು ಕೃತಿ ಅದು ಗದ್ಯ ಪದ್ಯ ವಿಮರ್ಶೆ ನಾಟಕ ಏನೇ ಆಗಿರಲಿ.ನಮ್ಮನ್ನು ಸೆಳೆಯುವ ಶಕ್ತಿ ಆ ಸತ್ಯಕ್ಕಿದೆ. ಅದೇ ಸಾಹಿತ್ಯದ ಕಾಣ್ಕೆ ಮತ್ತು ಅದರಲ್ಲಿರುವ ನೈಜತೆಗೆ ಹತ್ತಿರವಿರುವ ಪಾತ್ರ, ಪರಿಸರ,ಕಟ್ಟಿಕೊಡುವ ಕಲೆ,ಹಿಡಿದಿಟ್ಟ ಭಾಷೆ. ನೈಜತೆ ಅಥವಾ ನಾವು ಕರೆಯುವ ನಿರ್ಮಲಾಂತಃಕರಣ​ ಮತ್ತು ಅಷ್ಟೇ ಶುದ್ಧ​ವಾದ ಮನಕ್ಕೆ ನೀಡುವ ಪ್ರೀತಿ. ಈ ರೀತಿಯ ಪ್ರೀತಿಗೆ ಸಮಾನವಾದದ್ದು ಏನಾದರೂ ಇದ್ದೀತೆ ?ಖಂಡಿತ ಇರಲಾರದು.ಒಬ್ಬ ಲೇಖಕ ಬರೆಯುತ್ತಿರುವುದು ನೈಜತೆಯಿಂದ ಕೂಡಿಲ್ಲ ಎಂದು ಓದುಗನ ಅರಿವಿಗೆ ಬಂತೆಂದು ತಿಳಿಯಿರಿ ಅದು ನಮ್ಮ ನೆನಪಿನಿಂದ ಮಾಯ. ಅದು ಆ ಕೃತಿಯ ಮತ್ತು ಆ ಲೇಕಖನ ಸೋಲು ಹೌದು. ಒಂದು ಪುಸ್ತಕ ಓದುತ್ತಿದ್ದೇವೆ.ಅದರ ಚೌಕಟ್ಟು, ವಸ್ತು, ಪಾತ್ರಗಳು ನಮ್ಮನ್ನು ವಿಸ್ಮಯ ಲೋಕ​ಕ್ಕೆ ಕೊಂಡೊಯ್ಯುತ್ತ ತನ್ಮಯತೆ ಮೂಡಿಸಿದರೆ ಅ ಪುಸ್ತಕ ಯಶಸ್ಸು ಕಾಣಬಲ್ಲದು. ನಾಲ್ಕು ಜನರ ಬಾಯಲ್ಲಿ ಅದರ ಮಾತು ಬರಬಹುದು ಚರ್ಚೆಗೆ ಒಳಗಾಗಬಹುದು. ವಿಮರ್ಶಕ ಅದನ್ನು ತನ್ನ ಲೇಖನಗಳಲ್ಲಿ ಮಾದರಿ ಪುಸ್ತಕವಾಗಿ ಬಳಸಬಹುದು. ಎಲ್ಲದಕ್ಕೂ ಮೀರಿ ಒಳ್ಳೆಯ ಮಾರುಕಟ್ಟೆ ಪಡೆಯಬಹುದು. ಒಂದು ವೇಳೆ ಅದೇ ಪುಸ್ತಕದ ಪಾತ್ರಗಳ ಮಿತಿಯನ್ನು ದಾಟಿ ಲೇಖಕನೇ ಮಾತಾಡಿದ್ದರೆ ಅಂತಹ ಕೃತಿಗಳು ಅಪಮೌಲ್ಯ ಹೊಂದುತ್ತವೆ. ಇಲ್ಲಿ ಯಾವುದೇ ಒಬ್ಬ ಬರಹಗಾರ/ಕವಿ ಹೇಳುತ್ತಿರುವುದು ಸ್ವ​ಯಂ ಅವನವೇ ಆಗಿರಬೇಕೆ ? ಅವನ ಕಲ್ಪನೆ, ಪ್ರಯತ್ನಗಳಿಗೆ ಬೆಲೆ ಇಲ್ಲವೇ ? ಅದು ಹಾಗಲ್ಲ .   ಅಂತಹ ಕಲ್ಪನೆಯಲ್ಲೂ ಪ್ರಾಮಾಣಿಕತನ​ ಇದ್ದಾಗಲೇ ಸೃಜನಶೀಲತೆ ಗರಿಗೆದರಲು ಸಾಧ್ಯ. ಇಲ್ಲವಾದರೆ, ಅದು ಒಂದು ರೂಪಾಯಿಗೆ ಒಂದು ಆನೆಯ ಕಥೆ ! ಅಷ್ಟೆ !!  ಓದು,ಸಿನೆಮಾ ಧಾರಾವಾಹಿ ಇನ್ನಾವುದೇ ಕಲೆ ಮತ್ತೊಂದು ಏನೇ ಆಗಿರಲಿ ಆನಂದ, ಸಾಮಾನ್ಯ ಜ್ಞಾನ ಅಥವಾ ಏನೋ ಒಂದು ಸಾಹಿತ್ಯಿಕ ಸಂವೇದನೆ ಒದಗಿಸಬೇಕು. ಕಾವ್ಯಕಲೆಯ ಸದ್ಯ ಪ್ರಯೋಜನ ಕವಿ ಸಹೃದಯರಿಬ್ಬರಿಗೂ ಏಕಕಾಲಕ್ಕೆ ಉಂಟಾಗಬೇಕು ಹಾಗಾದಾಗ ಮಾತ್ರವೇ ಸೌಂದರ್ಯದ ಅನುಭೂತಿ ಮತ್ತು ಸಾಹಿತ್ಯದ ಕೊನೆಯ ಮಜಲನ್ನು ತಲುಪಿದ ತೃಪ್ತಿ. ಇವೆಲ್ಲ ಒಂದು ಕೃತಿ/ಲೇಖಕನಿಂದ ಸಿಗದೇ ಹೋದಾಗ, ಅದು ಸಾರಸ್ವತ ವಲಯದಲ್ಲಿ ಕಳೆದು ಹೋಗುತ್ತದೆ. ಒಂದು ಕೃತಿಯಲ್ಲಿರುವ ಒಂದು ಪಾತ್ರ ನಮ್ಮನ್ನು ಚಿಂತನೆಗೆ ಒಳಪಡಿಸುತ್ತದೆ ಅದರಲ್ಲಿ ನಾವೂ ಒಂದು ಪಾತ್ರವಾಗಿ ಹೋಗುತ್ತೇವೆ. ಯಾವುದೋ ದೃಶ್ಯ/ಪ್ಯಾರಾ ನಮ್ಮ ಕಣ್ಣನ್ನು ಹನಿಗೂಡಿಸುವ ತಾಕತ್ತು ಹೊಂದಿರುತ್ತದೆ.ಜೀವಂತವಿರುವ ಮತ್ತು ಸನಿಹದ ಸಂಪರ್ಕ ಇರುವ ಸ್ನೇಹಿತನಿಗಿಂತ, ಕಾರಂತರ ಚೋಮ, ಅನಂತಮೂರ್ತಿಯವರ ಪ್ರಾಣೇಶಾಚಾರ್, ತ್ರಿವೇಣಿ ಯವರ ಕಾವೇರಿ ನಮಗೆ ಬಹಳ ಹತ್ತಿರವಾಗುತ್ತಾರೆ.ಇದು ಹೇಗೆ ?ಒಂದು ಅನಿಸಿಕೆಯ ಪ್ರಕಾರ ನಮ್ಮ ಮನಸ್ಸು ಇದಕ್ಕೆ ಕಾರಣ.ಕಾಲ್ಪನಿಕ ಪಾತ್ರಗಳು,ನಮ್ಮೊಂದಿಗೆ, ಯಾವುದೇ ರೀತಿಯ ಪೈಪೋಟಿಗೆ ಇಳಿಯಲಾರವು ಎನ್ನುವ ಧೈರ್ಯ.ಇನ್ನೂ ಒಂದು ವಿಶಿಷ್ಟ ಲಕ್ಷಣ ಎಂದರೆ ಆ ಪಾತ್ರ ನಾವೂ ಆಗುವ ಸದವಕಾಶ ಇಲ್ಲಿದೆ.ಕನಿಷ್ಠ ಕೆಲವು ಸಮಯವಾದರೂ ನಮ್ಮನ್ನು ನಮ್ಮಿಂದ ದೂರ ಕರೆದೊಯ್ಯುವ ತಾಕತ್ತು ಇರುವುದು.ಇದು ಒಂದು ರೀತಿಯ ಬಯಲು ಆಲಯದೊಳಗೋ ಆಲಯವು ಬಯಲೋಳಗೋ ಎನ್ನುವ ಉಭಯ ರೀತಿಯ ಲೋಕ. ಬದುಕಿನ ಲಕ್ಷಣ.ಸಾಹಿತ್ಯ ಕಲಿಸುವ ಬದುಕು,ಬದುಕು ಕಲಿಸುವ ವಿದ್ಯೆ . ಫ್ಲೋರಿಡಾ ದೇಶದ ಭೌಗೋಳಿಕ ಸಂಗತಿಗಳಿಗಿಂತ, ಅಟ್ಲಾಂಟಿಕ್ ಸಾಗರದ ತೀರ ಪ್ರದೇಶಕ್ಕಿಂತ ಅದನ್ನು ನೋಡಲು ಹೋಗುವ ದಾರಿಯಲ್ಲಿ ಕಂಡ ವಿಶಾಲವಾದ ನದಿ ಮತ್ತು ಅದಕ್ಕಿರುವ ಹೆಸರಾದ ‘ಇಂಡಿಯಾ ರಿವರ’ ಬೋರ್ಡ್ ಓದಿದಾಗ ಧಿಡೀರನೆ ಇಡೀ ಅಮೆರಿಕ ನಮ್ಮದಾಗಿಬಿಡುತ್ತದೆ. ಶ್ರೀಲಂಕಾದ ಮೇಲೆ ಟಿಪ್ಪಣಿ ಬರೆಯಿರಿ ಎಂದಾಗ, ಅದರ ರಾಜಧಾನಿ ಯಾವುದು? ಅಲ್ಲಿಯ ಜನಸಂಖ್ಯೆ ಎಷ್ಟು ? ಅಲ್ಲಿಯ ಉಷ್ಣತಾಮಾನಕ್ಕಿಂತ ಸೇತುಕಟ್ಟಿ ಶ್ರೀಲಂಕೆಗೆ ಹೋದ ರಾಮಾಯಣದಿಂದಾಗಿ ಶ್ರೀಲಂಕಾ ನಮ್ಮದಾಗಿಬಿಡುತ್ತದೆ. ಇದನ್ನು ನಮಗೆ ಲಿಸುವುದು,ಬಾಹ್ಯ ಸಂಗತಿಗಳಲ್ಲ ಭಾವನಾ ಪ್ರಪಂಚ. ಅದು ಸಾಹಿತ್ಯ ಎಂದೇ ಧೃಡವಾದ ನಂಬಿಕೆ. ನಂಬಿಕೆ ಹುಸಿಯಾಗಲಾರದು ಎನ್ನುವುದು ಸಹ ನಂಬಿಕೆಯೇ. ಎಲ್ಲ ನಂಬಬೇಕು ಎನ್ನುವ ಹಟವೂ ಸಲ್ಲ. ನಂಬದಿರ್ದನು ತಂದೆ ನಂಬಿದನು ಪ್ರಹ್ಲಾದ ನಂಬಿಯೂ ನಂಬದಿರುವ ಇಬ್ಬಂದಿ ನೀನು ಕಂಬದಿನೋ, ಬಿಂಬದಿನೋ ಮೋಕ್ಷ ಅವರಿಂಗಾಯ್ತು. ಸಿಂಬಳದ ನೊಣ ನೀನು – ಮಂಕುತಿಮ್ಮ.                     ***************************************************************     ಪರಾಮರ್ಶನ ಸೂಚಿ. ವಿನಯ :- ಬೇಂದ್ರೆಯವರ ಆಯ್ದ ಕವನಗಳು. ಮಂಕುತಿಮ್ಮನ ಕಗ್ಗ :- ಡಿ.ವಿ.ಜಿ

ಹೀಗೊಂದು ಚಿಂತನೆ. Read Post »

ಕಾವ್ಯಯಾನ

ಸ್ಥಿತಿ

ಕವಿತೆ ಸ್ಥಿತಿ ಸುರೇಖಾ. ಜಿ . ರಾಠೋಡ. ರಾಮ ಹುಟ್ಟಿದ್ದುಸೀತೆಯನ್ನು ಪರೀಕ್ಷಿಸಲುಅನಿಸುತ್ತದೆಸೀತೆ ಹುಟ್ಟಿದ್ದುರಾಮನ ಪರೀಕ್ಷೆಗೆಒಳಪಡಲು ಅನಿಸುತ್ತದೆ ಆದರೆ….ಇಂದಿನ ಸೀತೆಯರುಇಂದಿನ ರಾಮರಿಗೆಪ್ರಶ್ನಿಸಬೇಕಾಗಿದೆಪ್ರತಿಯೊಂದು ದೌರ್ಜನ್ಯದ ಕುರಿತು ವಿನಾಕಾರಣಸಹಿಸುವುದಿಲ್ಲಅಸಮಾನತೆ, ದೌರ್ಜನ್ಯವನೆಂದು ಕೇಳಬೇಕಿದೆ ಇಂದಿನಸೀತೆಯರುಸಮಾನತೆ, ಸ್ವಾತಂತ್ರ್ಯ ಇತ್ಯಾದಿನಮಗೂ ಬದುಕುವ,ಅನಿಸಿದ್ದು ಹೇಳುವಸ್ವಾತಂತ್ರ್ಯ ವಿದೆ ಎಂದು ಹೇಳಬೇಕಿದೆ ಇಂದಿನರಾಮರಿಗೆ‘ನೀವು ರೂಪಿಸಿ ಕೊಟ್ಟ ಸಿದ್ದ ಮಾದರಿ ಸೀತೆಯರಲ್ಲವೆಂದು’ ಹೇಳಬೇಕಿದೆ ಬಾಬಾ ಸಾಹೇಬ್ ಅಂಬೇಡ್ಕರ್ರೂಪಿಸಿದ ಸಂವಿಧಾನದಂತೆನಡೆಯುತ್ತೆವೆಂದುಹೇಳಬೇಕಿದೆ, ತಿಳಿಸಬೇಕಿದೆ,ಅರಿವು ಮೂಡಿಸಬೇಕಿದೆಇಂದಿನ ಸೀತೆಯರು. **********************

ಸ್ಥಿತಿ Read Post »

ಕಾವ್ಯಯಾನ

ಗಜಲ್

ಗಜಲ್ ಶ್ರೀಲಕ್ಷ್ಮೀ ಅದ್ಯಪಾಡಿ. ಪುಟಿಯುತ್ತಿದ್ದಪುಳಕಗಳೆಲ್ಲಾಎತ್ತಹೋದವೋಅರಳುತ್ತಿದ್ದಕನಸುಗಳೆಲ್ಲಾಎತ್ತಹೋದವೋ ಕಣ್ಣಂಚಿನಲ್ಲಿನೋವಿನಹನಿತುಳುಕುತ್ತಲೇಇದೆನಲಿಯುತ್ತಿದ್ದಭಾವನೆಗಳೆಲ್ಲಾಎತ್ತಹೋದವೋ ಸುಡುಸುಡುತ್ತಿದೆಅವ್ಯಕ್ತಬೇಗೆಒಡಲಾಳದಲ್ಲಿಅರಳುತ್ತಿದ್ದನವಿರುಹೂಗಳೆಲ್ಲಾಎತ್ತಹೋದವೋ ಹೃದಯವೀಣೆಯತಂತಿಯಾಕೋಮುರಿದಂತಿದೆಹಾಡುತ್ತಿದ್ದಮಧುರರಾಗಗಳೆಲ್ಲಾಎತ್ತಹೋದವೋ ಮೌನದಲಿರುವಬೆಳದಿಂಗಳೂಉರಿಬಿಸಿಲಾದಂತಿದೆಹರಡುತ್ತಿದ್ದತಂಪುಕಿರಣಗಳೆಲ್ಲಾಎತ್ತಹೋದವೋ ಹೆಪ್ಪುಗಟ್ಟಿದನೋವಿನಲ್ಲಿಅಳುತ್ತಿದೆಶ್ರೀಯಮನಸುರಿಯುತ್ತಿದ್ದಪ್ರೇಮದಹನಿಗಳೆಲ್ಲಾಎತ್ತಹೋದವೋ *********************************

ಗಜಲ್ Read Post »

ಅಂಕಣ ಸಂಗಾತಿ, ಕಬ್ಬಿಗರ ಅಬ್ಬಿ

ಅಂಕಣ ಬರಹ ಕಬ್ಬಿಗರ ಅಬ್ಬಿ ಮೌ..ನದ ನಡುವಿನ ಮೌನ ಸುಮಾರು ಮೂವತ್ತು ವರ್ಷಗಳ ಹಿಂದೆ ಕಾಡಿನ ನಟ್ಟ ನಡುವೆ, ಟೆಂಟ್ ನೊಳಗೆ ಮಲಗಿದ್ದೆ. ಚಿಕ್ಕಮಗಳೂರಿನ ಭದ್ರಾ ರಕ್ಷಿತಾರಣ್ಯದಲ್ಲಿ ಸ್ಕೌಟ್ ಕ್ಯಾಂಪ್ ಅದು. ವಿದ್ಯುತ್ ದೀಪಗಳು ಇರಲಿಲ್ಲ, ಕತ್ತಲು ಸುತ್ತಲೂ.  ವರ್ಷಗಳ ಹಿಂದೆ ದೂರ ನಕ್ಷತ್ರ ಗಳಿಂದ ಯಾತ್ರೆ ಹೊರಟು ಯಾತ್ರೆಯ ದಣಿವಿನಿಂದ ಮಂದವಾದ ಕಿರಣಗಳು, ತಂಗದಿರನ ಸೌಮ್ಯ ಬೆಳಕು ಮಾತ್ರ ಆ ಕಾಡನ್ನು ತಬ್ಬಿದ್ದವು. ಟೆಂಟು ಸುತ್ತಲೂ ಗಗನಕ್ಕೆ ಗೆಲ್ಲು ಚಾಚಿದ ಬೃಹತ್ ವೃಕ್ಷಗಳು. ಅವುಗಳಿಂದಾಚೆಗೆ ಕತ್ತಲೆ ಅಂದರೆ ಕತ್ತಲೆಯೇ. ಟೆಂಟ್ ನೊಳಗೆ ಕಣ್ಣೆಷ್ಟು ಅರಳಿಸಿದರೂ ಅರಿವಿಗೇ ಎಟುಕದಟಷ್ಟು ಕತ್ತಲೆ. ಅದಕ್ಕಿಂತ ಗಾಢ ಅನುಭೂತಿ ಮೌನದ್ದು. ಎಲ್ಲೋ ದೂರದ ಪ್ರಾಣಿಗಳ ಕೂಗನ್ನು ಬಿಟ್ಟರೆ ಅಲ್ಲಿ ಶಬ್ಧಶೂನ್ಯತ್ವ. ಆ ಮೌನದ ತಂಪಿನಲ್ಲಿ ಮನಸ್ಸು ತಣಿದು ಸೂಕ್ಷ್ಮ ಸಂವೇದನೆಗಳು ಜಾಗೃತವಾಗುತ್ತೆ. ನಮ್ಮ ಎದೆಬಡಿತ ನಮಗೇ ಕೇಳ ತೊಡಗುತ್ತೆ. ಸಾಗರದ ಅಲೆಗಳು ಶಾಂತವಾದಾಗ ಆಳದಲ್ಲಿ ಸದ್ದಿಲ್ಲದೆ ನಡೆಯುವ ಹರಿವಿನ ಅನುಭೂತಿ ಆಗುತ್ತೆ. ಆಳದಲ್ಲಿ ಈಜಾಡುವ ಮೀನುಗಳು, ಬೃಹತ್ ತಿಮಿಂಗಿಲಗಳು, ರಕ್ತಕ್ಕಾಗಿ ಹಸಿದು ಅಸಹನೆಯಿಂದ ಸರಸರನೆ ಈಜುವ ಶಾರ್ಕ್ ಗಳು ಮತ್ತು ಇನ್ನಿತರ ಜಲಚರಗಳು ತಮ್ಮ ಚಲನೆಯಿಂದ ನಡೆಯುವ ತಲ್ಲಣಗಳು ಅರಿವಿಗೂ ಬರುತ್ತವೆ. ಹೃಷೀಕೇಶದ ತಪ್ಪಲಿನಿಂದ, ಹಿಮಾಲಯದ ಏರು ಆರಂಭ. ಹತ್ತಾರು ಕಿಲೋಮೀಟರ್ ಹತ್ತಿದರೆ ವಸಿಷ್ಠ ಗುಹೆ. ಅದರೊಳಗೆ ಕುಳಿತರೂ ಅಷ್ಟೇ, ರಾತ್ರೆಯ ಕತ್ತಲು, ಹಿಮಾಲಯದ ತಂಪಿಗೆ, ಮನಸ್ಸು ಸ್ಪಟಿಕೀಕರಿಸಿ ಮೌನ ಸಂಭವಿಸುತ್ತೆ. ಒಂದು ವಿಷಯ ಗಮನಿಸಿ. ಮೌನ ಎಂದರೆ ನಾಲಿಗೆಯನ್ನು ಸುಮ್ಮನಿರಿಸುವುದಲ್ಲ, ಕಿವಿ ಮುಚ್ಚುವುದೂ ಅಲ್ಲ. ನಮ್ಮ ಇಂದ್ರಿಯಗಳು ಹೊರಗಿನ  ಅಲೆಗಳಿಗೆ ಸ್ಪಂದಿಸುತ್ತಲೇ ಇರುತ್ತವೆ. ದೃಶ್ಯ, ಶಬ್ದ, ಸ್ಪರ್ಶ, ರಸಸ್ವಾದ, ವಾಸನೆ ಇವುಗಳನ್ನು ಗ್ರಹಿಸಿ ಪ್ರತಿಕ್ರಿಯೆ ಕೊಡುತ್ತವೆ. ಇವು ದೇಹದ ಚಟುವಟಿಕೆಗಳಿಗೆ ಅಗತ್ಯವೂ ಹೌದು. ಮೌನದ ಮೊದಲನೆಯ ಹಂತದಲ್ಲಿ, ಈ ಇಂದ್ರಿಯಗಳನ್ನು ಸಂಪೂರ್ಣ ಶಾಂತವಾಗಿಸಬೇಕು. ಅದು ಮೌನದ ಮೊದಲ ಹಂತ. ಮೌನದ ಎರಡನೆಯ ಹಂತದಲ್ಲಿ, ಭಾವ ಮತ್ತು ಕಲ್ಪನೆಗಳನ್ನು ಮೌನಕ್ಕೆ ಶರಣಾಗಿಸುವ ಕ್ರಿಯೆ. ಕಣ್ಣು ಮುಚ್ಚಿದರೆ, ಹೊರಗಿನ ದೃಶ್ಯ ಕಾಣದಿರಬಹುದು. ಆದರೆ ಮನಸ್ಸು, ಇಷ್ಟವಾದ, ಹಲವು ದೃಶ್ಯಗಳನ್ನು ಮನ:ಪಟಲದ ಮುಂದೆ ತಂದು ಆನಂದಿಸುತ್ತದೆ. ಹಾಗೆಯೇ ಶಬ್ಧವೂ. ಕಿವಿ ಮುಚ್ಚಿದರೂ, ಮನಸ್ಸಿನೊಳಗೆ ಇಷ್ಟವಾದ ಯಾವುದೋ ಹಾಡು, ಇನಿಯೆಯ ಪ್ರೀತಿಯ ಮಾತುಗಳು, ಮೇಷ್ಟ್ರು ಬೈದ ಮಾತುಗಳು, ಹೀಗೆ ಹತ್ತು ಹಲವು ಶಬ್ಧಗಳು ನಿಃಶಬ್ಧದ ಬಾಗಿಲು ಮುರಿದು ಒಳ ನುಗ್ಗುತ್ತವೆ. ಈ ಕಾನ್ಶಿಯಸ್ ಮೈಂಡ್ ಅನ್ನು ಮೌನವಾಗಿಸುವುದು ಎರಡನೆಯ ಹಂತ. ಮೂರನೆಯ ಹಂತದಲ್ಲಿ, ಧ್ಯಾನಕ್ಕೆ ಮನಸ್ಸನ್ನು ಸಮರ್ಪಿಸಿದರೆ, ಮೌನದ ತುರೀಯಕ್ಕೆ ಪ್ರಜ್ಞೆ ತಲಪುತ್ತೆ. ಇದರ ಬಗ್ಗೆ ಬೇಂದ್ರೆಯವರು ಹೀಗೆ ಹೇಳುತ್ತಾರೆ.  “ಮೌನವು ಮಾತಿನ ತಪಸ್ಸು- ಮೊದಲ ಮೆಟ್ಟಿಲು. ಎರಡನೆಯ ಮೆಟ್ಟಿಲಲ್ಲಿ ಅದು ಮೌನದ ಅವಸ್ಥಾ ಶಿಖರ! ನಿಜವಾದ ಉತ್ತಮ ಮೌನವು ಮನದ ಗೌರೀಶಂಕರ, ಧವಲಗಿರಿ” ಅರಬಿಂದೋ ಅವರ ಧ್ಯಾನ ಯೋಗದಿಂದ ಪ್ರೇರಣೆ ಪಡೆದು ೧೯೪೮ರಲ್ಲಿ, ಬೇಂದ್ರೆ ಮತ್ತು ವಿ.ಕೃ. ಗೋಕಾಕ್ ಅವರು, ಇತರ ಸಮಾನ ಮನಸ್ಕ ಗೆಳೆಯರ ಜತೆಗೆ ಮೌನ ಸಪ್ತಾಹ ಆಚರಿಸುತ್ತಾರೆ. ಆ ಮೌನ ಸಪ್ತಾಹದಲ್ಲಿ, ಮೌನಾಚರಣೆಯ ಗರ್ಭದ ಆಳಚಿಂತನೆಯಿಂದ ಅವರು ಬರೆದ ಕವನ ” ಅಸ್ಮಿತಾ” ಅದರ ಕೊನೆಯ ಸಾಲುಗಳು ಹೀಗಿವೆ. “ತಾಯಿ ಕೂಸಿನ ಮುದ್ದು ಮೌನದಲಿ ಮಿಡಿದಾಗ ಶ್ರುತಿಯನ್ನು ಹಿಡಿದಿರುವೆಯಾ ? ಧ್ಯಾನ ಪಕ್ವತೆ ಪಡೆದು ಮೌನ ಬೀಜವು ಸಿಡಿದು ಓಂವೇದ ಪಡೆದಿರುವೆಯಾ ? ಸ್ಮಿತವೆ ವಿಸ್ಮಿತವಾಯ್ತು ಅಸ್ಪರ್ಶ ಸ್ಪರ್ಶದಲಿ ಅಸ್ಮಿತೆಯು ಸ್ಫೂರ್ತಿಸಿತ್ತು ವಿಸ್ಮಿತದ ಸ್ತಿಮಿತದಲಿ ಮೌನವೇ ಧ್ವನಿಸುತಿರೆ ಸ್ಮಿತವಾಗಿ ಮೂರ್ತಿಸಿತ್ತು.” ಮೌನದಾಚೆಗಿನ ಧ್ಯಾನಸ್ಥ ಸ್ಥಿತಿಯಿಂದ, ” ಸ್ಮಿತವೆ ವಿಸ್ಮಿತವಾಯ್ತು, ಅಸ್ಪರ್ಶ ಸ್ಪರ್ಶದಲಿ ಅಸ್ಮಿತೆಯು ಸ್ಪೂರ್ತಿಸಿತ್ತು, ” ಶಬ್ದಗಳ ಶಬ್ಧಕ್ಕೆ ಮೀರಿದ ಸಾಲುಗಳಿವು. ಕಳಿಂಗ ಯುದ್ಧದ ನಂತರದ ರಾತ್ರೆ, ಚಕ್ರವರ್ತಿ ಅಶೋಕ ತಾನೇ ಹರಿಸಿದ ರಕ್ತದ ಕೋಡಿಯನ್ನು ನೋಡಿ ಹಲವು ಚಿಂತನೆಗಳಿಗೊಳಗಾಗುತ್ತಾನೆ. ರಾತ್ರೆಯಿಡೀ ಆತನ ಮೌನ, ಮಾರನೆಯ ದಿನ ತನ್ನ ಬದುಕನ್ನೇ ಅಹಿಂಸೆಗೆ ಸಮರ್ಪಣೆ ಮಾಡುವ ನಿರ್ಧಾರದ ಹಿಂದೆ ಯುದ್ಧಾನಂತರದ ಮೌನವಿದೆ. ಧಾರಾಕಾರವಾಗಿ ಸುರಿದ ಮಳೆ, ಸಿಡಿಲು, ಕೋಲ್ಮಿಂಚು, ನಂತರ ಎಲ್ಲವೂ ಮೌನವಾಗುತ್ತೆ. ತಡೆಯಲಾದ ದುಃಖದಿಂದ ಬಿಕ್ಕಿ ಬಿಕ್ಕಿ ಅತ್ತ ನಂತರವೂ ಒಂದು ಸುದೀರ್ಘ ಮೌನವಿರುತ್ತದೆ. ಗಂಡ ಹೆಂಡತಿಯರ ಜಗಳದ ನಂತರದ ಮೌನಕ್ಕೆ ಔಷಧೀಯ ಗುಣವಿದೆ. ಮೌನ ಖಾಲಿ ಹಾಳೆಯಂತೆ. ಅದರಲ್ಲಿ ನೀವೇನು ಕಾಣ ಬಯಸುತ್ತೀರೋ,ಅದನ್ನು ಬರೆಯಬಹುದು. ಅದಕ್ಕೇ ಮೌನವನ್ನು ಕವಿಗಳು ಕಾಡಿ ಕಂಡು ಹಾಡಿ, ಬಳಸಿದ್ದಾರೆ. ಬೇಂದ್ರೆಯವರ “ಏಲಾಗೀತ” ದಲ್ಲಿ ಮೌನದ ಅಪೂರ್ವ ಸಾಲು ಹೀಗಿದೆ. “ಸ್ವಾದದ ನಾದದ ಮೋದದ ಒಳಬಸಿರನೆ ಬಗೆದು ಹುಂಕಾರದ ಒಳನೂಲನು ಮೆಲ್ಲನೆ ಹೊರದೆಗೆದು  ಶಬ್ದಕೆ ಹಾಸಿಗೆಯಾಗಿಹ ತನಿಮೌನದಿ ಮುಗಿದು. “ ಮೌನ, ಶಬ್ಧಕ್ಕೆ ಹಾಸಿಗೆ ಅನ್ನುತ್ತಾರೆ,ಬೇಂದ್ರೆಯವರು ಗೋಪಾಲಕೃಷ್ಣ ಅಡಿಗರ ಈ ಕೆಳಗಿನ ಕವನ ಆರಂಭವಾಗುವುದೇ ಮೌನದಿಂದ. “ಮೌನ ತಬ್ಬಿತು ನೆಲವ; ಜುಮ್ಮೆನೆ ಪುಳಕಗೊಂಡಿತು ಧಾರಿಣಿ ನೋಡಿ ನಾಚಿತು ಬಾನು; ಸೇರಿತು ಕೆಂಪು ಸಂಜೆಯ ಕದಪಲಿ ಹಕ್ಕಿಗೊರಲಿನ ಸುರತಗಾನಕೆ ಬಿಗಿಯು ನಸುವೆ ಸಡಿಲಿತು ಬೆಚ್ಚಬೆಚ್ಚನೆಯುಸಿರಿನಂದದಿ ಗಾಳಿ ಮೆಲ್ಲನೆ ತೆವಳಿತು ಇರುಳ ಸೆರಗಿನ ನೆಳಲು ಚಾಚಿತು, ಬಾನು ತೆರೆಯಿತು ಕಣ್ಣನು; ನೆಲವು ತಣಿಯಿತು, ಬೆವರು ಹನಿಯಿತು; ಭಾಷ್ಪ ನೆನೆಸಿತು ಹುಲ್ಲನು ಮೌನ ಉರುಳಿತು, ಹೊರಳಿತೆದ್ದಿತು; ಗಾಳಿ ಭೋರನೆ ಬೀಸಿತು, ತೆಂಗುಗರಿಗಳ ಚಾಮರಕೆ ಹಾಯೆಂದು ಮೌನವು ಮಲಗಿತು” ಭೂಮಿಯೇ ಮೌನವನ್ನು ಬೆಚ್ಚಗೆ ಅಪ್ಪಿಕೊಂಡು ಪುಳಕಗೊಳ್ಳುವಾಗ, ಆಕೆ ಧಾರಿಣಿಯಾಗುತ್ತಾಳೆ. ಹಿಂದುಸ್ತಾನಿ ಸಂಗೀತದಲ್ಲಿ, ಒಂದು ಸ್ವರವನ್ನ ಬಿಗಿ ಹಿಡಿದು ಕಡಿಯದ ಧಾರೆಯಂತೆ ಮಾಡುವ ಸುದೀರ್ಘ ಆಲಾಪಕ್ಕೆ, ಧಾರಣೆ ಅನ್ನುವುದಿದೆ. ಧಾರಣೆಯಲ್ಲಿ ಸ್ವರಸಮರ್ಪಣೆಯ ಧ್ಯಾನಸ್ಥ ಮನಸ್ಸಿದೆ. “ಮೌನ ಉರುಳಿತು, ಹೊರಳಿತೆದ್ದಿತು; ಗಾಳಿ ಭೋರನೆ ಬೀಸಿತು, ತೆಂಗುಗರಿಗಳ ಚಾಮರಕೆ ಹಾಯೆಂದು ಮೌನವು ಮಲಗಿತು” ಪ್ರಕೃತಿಯ ಕ್ರಿಯೆಗಳು ಮೌನವನ್ನು ಜತೆ ಜತೆಗೇ ಹೊತ್ತು ತರುತ್ತವೆ. ನಾವು ನಡೆಯುವಾಗ, ಎರಡು ಹೆಜ್ಜೆಗಳ ನಡುವೆ ಮೌನವಿದೆ. ನಾವು ಬರೆಯುವ ವಾಕ್ಯಗಳಲ್ಲಿ ಪದಗಳ ನಡುವೆ ಮೌನವಿದೆ. ಸ್ಫುರಿಸುವ ಭಾವ ವೈವಿಧ್ಯಗಳ ನಡುವೆ ಮೌನವಿದೆ. ನಿತ್ಯಕವಿ ನಿಸಾರ್ ಅಹಮದ್ ಅವರ ಬೇಸರಾಗಿದೆ ಮಾತು ಕವನದ ಕೆಲವು ಸಾಲುಗಳು ಹೀಗಿದೆ ನೋಡಿ. ” ಬೇಸರಾಗಿದೆ ಮಾತು, ಭಾರವಾಗಿದೆ ಮೌನ ನೋವು ಕರಗಿದೆ ಕಣ್ಣಲ್ಲಿ ಅಡಿಗೆ ಚುಚ್ಚಿದ ಮುಳ್ಳು ಒಳಗಡೆಯೆ ಮುರಿಯದಂತೆ ಭಾವ ಕುಟುಕಿದೆ ಮನದಲಿ ಸಿಪ್ಪೆ ತಿರುಳನು ಉಳಿದು ಮಣ್ಣಿಗುರುಳಿದ ಬೀಜ ಕನಸುವಂತೆಯೆ ಮೊಳಕೆಗೆ ಎಲ್ಲ ನಂಟನು ತೊರೆದು ನಗ್ನವಾಗಿದೆ ಜೀವ ಹೊಸತು ಬದುಕಿನ ಬಯಕೆಗೆ” ಅಡಿಗೆ ಚುಚ್ಚಿದ ಮುಳ್ಳು, ಒಳಗಡೆಯೆ ಮುರಿದು, ನೋವೇ ಕಣ್ಣೀರಲ್ಲಿ ಕರಗಿದ ದುಃಖದಿಂದ, ಮೌನ ಸಹಜವೂ ಹೌದು, ಆ ಮೌನ ಭಾರವೂ ಹೌದು. ಆದರೆ ಅಂತಹ ಮೌನ ನೋವಿನ ಹಿಂದಿನ ಬಂಧನದ ಅರಿವನ್ನು ತಿಳಿಯಾಗಿಸಲು ದಾರಿಯಾಗುತ್ತೆ. ಎಲ್ಲ ನಂಟನು ತೊರೆದು ನಗ್ನವಾದ ಜೀವ, ಹೊಸ ಬದುಕಿನತ್ತ ಕದ ತೆರೆಯುತ್ತೆ. ಈ ಎಲ್ಲ ನಂಟನು ತೊರೆದು ನಗ್ನವಾಗುವ ಕ್ರಿಯೆಯ ಮೂಲದಲ್ಲಿ ಮೌನ ಸೃಜಿಸಿದ ಮಂಥನವಿದೆ. ಹುಟ್ಟಿದ ನೆಲದಿಂದ ಗಿಡವನ್ನು ಕಿತ್ತು ತೆಗೆದರೆ ಗಿಡಕ್ಕೆಷ್ಟು ನೋವಾಗಬಹುದು. ಹಾಗೆ ಬೇರು ಸಹಿತ ಕಿತ್ತ ಗಿಡವನ್ನು ದೂರದ ಅರಿಯದ ಹೊಲದಲ್ಲಿ ನೆಟ್ಟರೆ?. ಮದುವೆಯಾಗಿ ಪ್ರೀತಿಯ ತನ್ನ ಮನೆ  ತವರುಮನೆಯಾಗುವ ಮಾರ್ಪಾಡಿನಲ್ಲಿ, ತಿಳಿಯದ ಇನ್ನೊಂದು ಮನೆ ಸ್ವಂತದ್ದಾಗಿಸಲೇ ಬೇಕಾದ ಟ್ರಾನ್ಸಿಷನ್ ಹೂಮನಸ್ಸಿನ ಹುಡುಗಿಗೆ ಹೇಗನಿಸಬಹುದು?. ಗಂಡನ ಮನೆಯ ಆ ಮೊದಲ ದಿನದ ಮೌನದ ಬಗ್ಗೆ ಬಹುಷಃ ಕೆ ಎಸ್ ನ ಅವರಿಗಿಂತ ಚಂದ ಯಾರೂ ಬರೆಯಲಾರರು. “ಮೊದಲ ದಿನ ಮೌನ ಅಳುವೇ ತುಟಿಗೆ ಬಂದಂತೆ ಚಿಂತೆ ಬಿಡಿ ಹೂವ ಮುಡಿದಂತೆ ಹತ್ತುಕಡೆ ಕಣ್ಣು ಸಣ್ಣಗೆ ದೀಪ ಉರಿದಂತೆ ಜೀವದಲಿ ಜಾತ್ರೆ ಮುಗಿದಂತೆ” ಅಂತಹ ತಳಮಳ, ತನ್ನವರ ಅಗಲಿಕೆಯ ದುಃಖ,  ಭಾವೋದ್ವೇಗ, ಭಯ, ಎಲ್ಲವನ್ನೂ ಈ ಮೊದಲ ದಿನ ಮೌನ, ಮೌನವಾಗಿಯೇ ಹೇಳಿಬಿಡುತ್ತೆ. ಪು ತಿ ನ ಅವರ “ಯದುಗಿರಿಯ ಮೌನ ವಿಕಾಸ” ಎಂಬ ಕವನವೂ ಮೌನ ಪ್ರತಿಮೆಯ ಸುತ್ತ ಹಲವು ರೂಪಗಳ ಕೆತ್ತಿದೆ.. ಈ ಕವಿತೆಯ ಬಗ್ಗೆ ಬರೆಯಲು ಒಂದು ಪೂರ್ತಿ ಲೇಖನವೂ ಸಣ್ಣದಾದೀತು, ಮುಂದೊಂದು ದಿನ ಬರೆಯುವೆ. “ಅಲೆಯೊಳಗಿನ ಮೌನ”  ಎಂಬ ಗಜಲ್ ಸಂಕಲನದಲ್ಲಿ ಶ್ರೀದೇವಿ ಕೆರೆಮನೆ ಅವರ ಕವಿತೆಯೂ ಪ್ರೀತಿ ಸಂವಾದದ ಸಾಲುಗಳಲ್ಲಿ ಮೌನಕ್ಕೆ ಹಲವು ಅರ್ಥಪ್ರಯೋಗ ಮಾಡಿದೆ. “ಯುಗಾಂತರದಿಂದಲೂ ಮೌನಕ್ಕೆ ಜಾರಿದಂತೆ ಮನಸ್ಸು ಹೆಪ್ಪುಗಟ್ಟುತ್ತಿದೆ ನಿನ್ನ ಒಂದು ಮಾತು ನನ್ನ ಬದುಕಿಗೆ ಮರಳುವಂತೆ ಮಾಡುತ್ತಿದೆ ಮೌನದಿಂದ ನನ್ನನ್ನು ಕೊಲ್ಲುವ ಇರಾದೆ ಏಕೆ ನಿನಗೆ ನಿನ್ನ ಮೌನ ನನ್ನನ್ನು ಇರಿದಿರಿದು ಸಾಯಿಸುತ್ತಿದೆ. ಮುಗಿದ ಮಾತುಗಳ ಮೌನದರಮನೆಗೆ ರಾಣಿಯಾಗಲಾರೆ ಅರಮನೆಯ ಸಂಕಲೆ ನನ್ನನ್ನು ದಿಕ್ಬಂಧನಕ್ಕೆ ಒಳಪಡಿಸುತ್ತಿದೆ ಮಾತಿಗೂ ಬರಗಾಲ ತಂದಿಡುವ ಆಶಯವಾದರೂ ನಿನಗೇಕೆ? ಮಾತು ಈಗ ದೂರದಲ್ಲಿ ಸೆಳೆಯುವ ಮೃಗಜಲದಂತೆ ಗೋಚರಿಸುತ್ತಿದೆ. ಸಾಕುಬಿಡು ನಿನ್ನ ಗಾದೆ ಮಾತಿನ ಥಳುಕಿಗಷ್ಟು ಬೆಂಕಿಯಿಡು ಬದುಕಿಸುವ ಮಾತಿನ ಬೆಳ್ಳಿಗಿಂತ ಮೌನದ ಬಂಗಾರ ಕೊಲ್ಲುತ್ತಿದೆ. ಎಂದಾದರೂ ಬದುಕು ಮೌನದ ಕಣಿವೆಯೊಳಗೆ ಜಾರಲೇ ಬೇಕು ‘ಸಿರಿ’ ಒಂದಾಗಿಸುವ ಮೃದು ಮಾತನ್ನಷ್ಟೇ ಬೇಡುತಿದೆ.” ಮೌನ ವಿರಹಸೂಚಕವಾಗಿ, ಮೌನವೇ ಎದೆಗಿರಿಯುವ ಆಯುಧವಾಗಿ, ಮೌನ ಅರಮನೆಯಾಗಿ, ಸಂಕಲೆಗಳಾಗಿ,  ಮಾತಿನ ಬರಗಾಲವಾಗಿ,  ಮೌನ,ಬದುಕಿನ ಅನಿವಾರ್ಯ ಕಣಿವೆಯಾಗಿ ಚಿತ್ರಿಸಲ್ಪಟ್ಟದ್ದು ಕವಯಿತ್ರಿಯ ಸೃಜನಶೀಲತೆಗೆ ಸಾಕ್ಷಿ. ಅಲೆಯೊಳಗಿನ ಮೌನ ಎಂಬ ಸಂಕಲನದ ಶೀರ್ಷಿಕೆಗೂ ವಿಶೇಷ ಅರ್ಥವಿದೆ. ನಾದ ಎಂಬುದು ಒಂದಕ್ಕೊಂದು ಜೋಡಣೆಯಾಗಿ ಕಾಲಗತಿಯಲ್ಲಿ ಸಂಚರಿಸುವ ಅಲೆಯ ಪ್ರವಾಹ. ಆ ನಾದದೊಳಗೆ, ತರಂಗಾವರ್ತನಗಳೊಳಗೆ ಮೌನ ಕಾಣುವ ಅನನ್ಯ ನೋಟ ಕವಯಿತ್ರಿ ಅವರದ್ದು. ಜನವರಿ ಇಪ್ಪತ್ತಾರು, ಕೆ ಎಸ್ ನ ಅವರ ಮತ್ತು ಮೂವತ್ತೊಂದು ಬೇಂದ್ರೆಯವರ ಜನ್ಮ ದಿನ. ಅವರಿಬ್ಬರ ದಿವ್ಯ ಭವ್ಯ ಚೇತನಗಳಿಗೆ ಶಿರಬಾಗಿ ನಮಿಪೆ. ********************************************************** ಮಹಾದೇವ ಕಾನತ್ತಿಲ ಹುಟ್ಟಿದ್ದು, ಗಡಿನಾಡ ಜಿಲ್ಲೆ,ಕೇರಳದ ಕಾಸರಗೋಡು ಜಿಲ್ಲೆಯಲ್ಲಿ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ, “ಮೆಟೀರಿಯಲ್ಸ್ ಸೈನ್ಸ್” ನಲ್ಲಿ ಸ್ನಾತಕೋತ್ತರ ಪದವಿ, ಐ.ಐ.ಟಿ. ಮದರಾಸು, ವಿನಿಂದ ಭೌತಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದು, ಕಳೆದ ಎರಡು ದಶಕದಲ್ಲಿ, ಡಿ.ಆರ್.ಡಿ.ಒ. ಹೈದರಾಬಾದ್ ನಲ್ಲಿ, ವಿಜ್ಞಾನಿಯಾಗಿ ವೃತ್ತಿ. ಸಾಹಿತ್ಯ, ಓದು ಬರಹ, ಹಾಗೂ ಸಂಗೀತ ಹೃದಯಕ್ಕೆ,ಹತ್ತಿರ

Read Post »

ಕಥಾಗುಚ್ಛ

ಅಧ್ಯಾತ್ಮಿಕ ತುಡಿತದೆಡೆಗೆ ಮನ

ಕಥೆ ಅಧ್ಯಾತ್ಮಿಕ ತುಡಿತದೆಡೆಗೆ ಮನ ಬಸವರಾಜ ಕಾಸೆ ಆತ ಪ್ರಕಾಶ, ಅದೇನೋ ಚಿಕ್ಕವನು ಇದ್ದಾಗಿನಿಂದಲೇ ದೇವರೆಂದರೆ ಆತನಿಗೆ ಅಪಾರ ಭಕ್ತಿ. ಅವನ ಮನಸ್ಸು ಸದಾ ಅಲೌಕಿಕ ಕಡೆಗೆ ತುಡಿಯುತ್ತಿತ್ತು. ಆತನ ಮೈ ಬಣ್ಣ ಕಡುಕಪ್ಪು. ಆದರೆ ಶ್ವೇತ ಬಣ್ಣದ ಅತ್ಯಂತ ಸುಂದರ ಭಾವನೆಗಳಿದ್ದವು. ಆ ಬಣ್ಣದ ಕಾರಣದಿಂದ ಬಂಧುಗಳಿಂದಲೇ ಒಂದಿಷ್ಟು ತಿರಸ್ಕಾರಕ್ಕೆ ಒಳಗಾಗಿದ್ದ. ಆತನದು ಕೆಳಜಾತಿ ಎನ್ನುವ ಕಾರಣಕ್ಕೆ ಇನ್ನೂ ಹೊರಗಿನ ಜನಗಳಿಂದ ಅಸಡ್ಡೆಗೆ ಒಳಗಾಗಿದ್ದ. ಇವೆಲ್ಲವೂ ಒಂದೊಂದಾಗಿ ಬೆಳೀತಾ ಬೆಳೀತಾ ಆತನ ಅರಿವಿಗೆ ಬರತೊಡಗಿತು. ಇದರಿಂದಾಗಿ ಆತ ಹೆಚ್ಚೆಚ್ಚು ಇತರರೊಂದಿಗೆ ಬೆರೆಯುವುದನ್ನು ಬಿಟ್ಟು ಒಬ್ಬಂಟಿಯಾಗಿ ಉಳಿಯತೊಡಗಿದ. ಇದರಿಂದ ಆಚೆ ಬೇರೆ ಒಂದಕ್ಕೆ ಅವನು ಸದಾ ಚಡಪಡಿಸುತ್ತಿದ್ದ. ಮತ್ತೆ ಈ ಜಾತಿ ಅಂತಹ ಅನಿಷ್ಟ ಕಟ್ಟಳೆಗಳನ್ನು ಬುಡ ಸಮೇತ ಕಿತ್ತು ಹಾಕಬೇಕು ಎಂದೇ ಹಂಬಲಿಸುತ್ತಿದ್ದನು. ಬಣ್ಣ ನೋಡಿ ಹೀಯಾಳಿಸುವವರೇ ಈ ಬಣ್ಣ ಒಪ್ಪಿ ಮೆಚ್ಚಬೇಕು ಎಂದೆಲ್ಲಾ ಹಾತೊರೆಯುತ್ತಿದ್ದ. ಕೃಷ್ಣನೂ ಸಹ ಕಪ್ಪು, ಆದರೆ ಕೃಷ್ಣನೆಂದರೆ ಅದೆಂತಹ ಮೋಹ ಅಂತೆಯೇ ಈ ಕಪ್ಪು ಅಂದರೂ ಸಹ ಅಂತಹ ಒಂದು ವ್ಯಾಮೋಹ, ಎಲ್ಲಾ ದೇವರುಗಳು ಎಂತೆಂತಹ ಜಾತಿ, ಅವರನ್ನೊಮ್ಮೆ ಕೇಳಿ ಬರಬೇಕು ಎಂಬ ತರಾತುರಿ. ಬಣ್ಣ, ಜಾತಿ ಮೊದಲಾದ ಮನುಷ್ಯ ಸೃಷ್ಟಿ ದಬ್ಬಾಳಿಕೆಗಳ ಅಂತ್ಯ ಎನ್ನುವ ಆತನ ಗುರಿಯೊಂದಿಗೆ ಅಧ್ಯಾತ್ಮದೆಡೆಗಿನ ಒಲವು ದಿನ ಕಳೆದಂತೆ ಹೆಚ್ಚಾಗತೊಡಗಿತು. ಯಾವುದಾವುದೋ ಧ್ಯಾನ ಶಿಬಿರಗಳಲ್ಲಿ ವರ್ಷಗಟ್ಟಲೆ ಕಳೆದ. ಯೋಗ ಸಿದ್ದಿಯನ್ನು ರೂಢಿಗತ ಮಾಡಿಕೊಂಡ. ಪಾಠ ಪ್ರವಚನಗಳಲ್ಲೇ ಸದಾ ಮಗ್ನನಾಗಿರುತ್ತಿದ್ದ. ಅದೆಷ್ಟೋ ವರ್ಷಗಳು ಕಳೆದರೂ ಆತ ಇನ್ನೂ ಸರಿಯಾಗಿ ಮಾರ್ಗದರ್ಶನ ನೀಡುವ ಗುರುವಿನ ಹುಡುಕಾಟದಲ್ಲಿ ಇದ್ದ. ಜಾತಿಗೆ ಒಂದೊಂದು ಮಠ. “ನಿಮ್ಮ ಸೇವೆ ಮಾಡುವೆ, ಮಾರ್ಗದರ್ಶನ ನೀಡಿ” ಅವರೆಲ್ಲಾ ಕೇಳಿದೊಂದೆ “ನಿನ್ನದು ಯಾವ ಜಾತಿ”. ಅಲ್ಲಿಯೂ ಇವನಿಗೆ ಸ್ಥಳವಿರಲಿಲ್ಲ. ತನ್ನದೇ ಜಾತಿಯ ಮಠಕ್ಕೆ ಹೋದರೆ ಅಲ್ಲಿ ಬಣ್ಣದ ನೆಪ. ಹೆಚ್ಚಿನ ಮಠಗಳು ನೂರಾರು ವೈವಿಧ್ಯಮಯ ವ್ಯಾಪಾರಗಳು ಕುದುರುವ ಮತ್ತು ನಡೆಸುವ ಪುಣ್ಯ ಸ್ಥಳಗಳಾಗಿದ್ದವು. ಈತ ನಡೆ ಮುಂದೆ, ನಡೆ ಮುಂದೆ ಎಂದು ಖಾಲಿ ಜೋಳಿಗೆಯೊಂದನ್ನು ನೇತು ಹಾಕಿಕೊಂಡ ಫಕೀರ ದೇಶ ಸುತ್ತುತ್ತಾ ಹೊರಟ. ಆದರೆ ಅವನ ಆ ಜೋಳಿಗೆ ಜ್ಞಾನದಿಂದಲೇ ತುಂಬಿಕೊಂಡಿತು. ಪ್ರತಿ ಪ್ರದೇಶಕ್ಕೆ ಹೋದಾಗಲೂ ಹೊಸ ಹೊಸ ಅನುಭವ, ವಿಚಿತ್ರ ವಿಚಿತ್ರ ಜನಗಳ ಪರಿಚಯ, ವಿಭಿನ್ನ ಪರಿಸರದ ಸ್ವಾದ ಸವಿಯುತ್ತಲೇ ನಡೆದೇ ಇದ್ದ. ಆತನಿಗೆ ವಿಶ್ರಾಂತಿ ಬೇಕು ಎನಿಸಿದಾಗ ಸಿಗುವ ಸ್ಥಳವೇ ನೆಮ್ಮದಿ ತಾಣ. ಎಲ್ಲಿ ಏನು ಸಿಗುತ್ತೋ ಅದೇ ಆಹಾರ. ಜೀವನದ ಎಲ್ಲಾ ಜಂಜಾಟಗಳಿಂದ ದೂರ ಆಗಿದ್ದ ಆತನಿಗೆ ಸ್ವಾರ್ಥಗಳ ಪರಿಕಲ್ಪನೆಯೇ ನಡುಕ ಹುಟ್ಟಿಸುತ್ತಿತ್ತು. ಅದೆಷ್ಟೋ ವರ್ಷಗಳ ಕಾಲ ನಡೆದು ಎಲ್ಲಾ ದೇವ ಸನ್ನಿದಿಗಳಿಗೆ ಭೇಟಿ ನೀಡಿದ. ಕೊನೆಗೆ ಹಿಮಾಲಯಕ್ಕೆ ಹೋಗಿ ಅಲ್ಲಿ ಇದ್ದ ಅಘೋರಿಗಳ ಪರಿಚಯಿಸಿಕೊಂಡು ಮುಕ್ತಿ ಮಾರ್ಗದೆಡೆಗೆ ಮುಕ್ತ ಮನಸ್ಸಿನಿಂದ ನನ್ನನ್ನು ಮುನ್ನೆಡೆಸಿ ಎಂದು ವಿನಂತಿಸಿದ. ಕೊನೆಗೆ ಒಬ್ಬ ಅಘೋರಿ ಕಠಿಣ ಯಾಗ, ಪರಿಶ್ರಮ, ತಪೋಧ್ಯಾನಗಳ ಕುರಿತು ನಿರಂತರವಾಗಿ ತಿಳಿಸುತ್ತಾ ಹೋದ. ಭಯಂಕರವಾದ ವಿಭಿನ್ನ ತಪಸ್ಸುಗಳನ್ನು ಆಚರಿಸತೊಡಗಿದ. ಆತನಿಗೆ ಈ ಜಗದ ಪರಿವೆ ಇರದೇ ಅದರಲ್ಲಿಯೇ ಕಳೆದು ಹೋಗಿ ಬಿಟ್ಟಿದ. ಭಂಗಿ ಸೇದುವುದೇ ಆತನ ಶಕ್ತಿ ಹೆಚ್ಚು ಮಾಡುತಿತ್ತು. ಇನ್ನೂ ಆಹಾರವಂತೂ ಸಿಕ್ಕಿದೆಲ್ಲವೂ ತಿನ್ನತೊಡಗಿದ. ರಹಸ್ಯ ವಿದ್ಯೆಗಳು ಎಲ್ಲಾವನ್ನು ತನ್ನೊಳಗೆ ಅರಗಿಸಿಕೊಳ್ಳತೊಡಗಿದ. ಆತನಿಗೆ ಅದೊಂದು ಸುಂದರ ಪ್ರಪಂಚವೇ ಆಗಿ ಹೋಗಿತ್ತು. ಆತನ ಮೈ ಮನಸ್ಸು ಹೇಗೇಗೋ ಹದಗೊಂಡು ಮತ್ತೊಂದು ರೂಪವೇ ಪಡೆದಿತ್ತು. ಹೀಗಾದರೆ ತನ್ನ ಗುರಿ ಎಂದುಕೊಂಡು ಹಿಮಾಲಯ ಬಿಟ್ಟು ಮತ್ತೆ ದೇಶ ಸುತ್ತುತ್ತಾ ಹಿಂತಿರುಗತೊಡಗಿದ. ಮತ್ತೆ ದಾರಿಯುದ್ದಕ್ಕೂ ಅಪರಿಚಿತ ಜನರೊಂದಿಗೆ ಓಡಾಟ, ಆತನ ದಿವ್ಯ ತೇಜಸ್ಸಿನ ಮುಖ ಮತ್ತು ಇರುವ ಜ್ಞಾನಕ್ಕೆ ಅಲ್ಲಲ್ಲಿ ಜನ ಸೋತು ಹೋದರು. ದಾರಿಯಲ್ಲಿ ಎಲ್ಲೇ ಏನೇ ಪ್ರವಚನ ನಡೆಯುತ್ತಿದ್ದರೂ ಅಲ್ಲಿ ಹೋಗಿ ವಾದಿಸತೊಡಗಿದ. ದೊಡ್ಡ ದೊಡ್ಡ ಸ್ವಾಮೀಜಿಗಳೇ ಬೆರಗಾಗುವಂತೆ ತನ್ನ ಸಿದ್ದಾಂತಗಳನ್ನು ಪ್ರತಿಪಾದಿಸತೋಡಗಿದ. ಹೋದಲ್ಲಿ ಎಲ್ಲಾ ತನ್ನದೇ ಉಪದೇಶಗಳನ್ನು ನೀಡತೊಡಗಿದ. ಅಧ್ಯಾತ್ಮಿಕತೆಯ ಉತ್ತುಂಗ ತಲುಪಿದ ಆತನ ಬೋಧನೆಗಳು ಸರಳವಾಗಿ ಜನರ ಮನಸ್ಸಿಗೆ ನಾಟಿದವು. ಈತನ ಈ ಕಾರ್ಯಗಳೆಲ್ಲವೂ ಜನರಿಂದ ಜನರಿಗೆ ಹಬ್ಬಿ ಮಾಧ್ಯಮಗಳ ಮೂಲಕ ಎಲ್ಲರನ್ನೂ ತಲುಪತೊಡಗಿದ. ಆತನ ಈ ದಾರಿಯಲ್ಲಿ ಎಷ್ಟೋ ಜನ ಆತನ ಭಕ್ತರಾದರೆ ಇನ್ನೂ ಕೆಲವರು ಆತನ ಶಿಷ್ಯಂದಿರೇ ಆದರು. ತನ್ನ ಸ್ವಂತ ಊರು ತಲುಪುವಷ್ಟರಲ್ಲಿ ಆತನ ಖ್ಯಾತಿ ಮನೆ ಮಾತಾಗಿತ್ತು. ಜಾತಿ, ಬಣ್ಣಗಳ ಮೀರಿ ಬೆಳೆದ ಆತನಿಗೆ ಅನುಯಾಯಿಗಳೇ ಆಶ್ರಮವೊಂದನ್ನು ಕಟ್ಟಿಸಿಕೊಟ್ಟರು. ಕಾಲ ಕಳೆದಂತೆ ವಿದೇಶಿ ಹಣವೂ ಹರಿದು ಬಂತು. ಅಣ್ಣ ಎಂದು ಆತನ ಶಿಷ್ಯಂದಿರೇ ಕರೆಯುತ್ತಿದ್ದರಿಂದ ಆತ ಅಣ್ಣ ಎಂದೇ ಹೆಸರು ವಾಸಿಯಾದ. ಕೈ ಕುಲುಕುವ ಒಂದು ಹೊಸ ಪದ್ಧತಿಯನ್ನು ರೂಡಿಸಿಕೊಂಡ ಆತನ ಕೈ ಕುಲುಕಲು ಇಂದು ಶ್ವೇತ ಬಣ್ಣದವರು, ಉಚ್ಚ ಜಾತಿಯವರು ಸರದಿಯಲ್ಲಿ ನಿಂತರೂ ಆತನ ದರುಶನವೇ ಇನ್ನೂ ಸಿಗುತ್ತಿಲ್ಲ. ****************************************

ಅಧ್ಯಾತ್ಮಿಕ ತುಡಿತದೆಡೆಗೆ ಮನ Read Post »

ಅಂಕಣ ಸಂಗಾತಿ

ಅಂಕಣ ಬರಹ ಮಕ್ಕಳು ಮಾತ್ರ ಹೀಗಿರಲು ಸಾಧ್ಯ ಅಲ್ಲವಾ.. ಹೆರಿಗೆ ನೋವು ಶುರುವಾಗುವ ಸೂಚನೆಗಳಿದ್ದವು. ಅಂದು ಬೆಳಗ್ಗೆ ಮಗ್ಗಲು ಬದಲಾಯಿಸುವಾಗಲೇ ಎಂಥದೋ ನೋವಿನ ಸಳುಕು ಚುಳ್ ಎನ್ನಲು ಶುರುಮಾಡಿತ್ತು. ನಿಧಾನ ಎದ್ದು ನೆಲಕ್ಕೆ ಕಾಲು ಊರಿದಾಗ ಪಾದಗಳು ನೋಯುತ್ತಿದ್ದವು. ಇನ್ನು ಈ ದೇಹದ ಭಾರ ಹೊರಲಾರೆ ಎನ್ನುವಷ್ಟು  ಊದಿಕೊಂಡಿದ್ದ ಪಾದಗಳು ಇಡಲಾರದೆ ಹೆಜ್ಜೆ ಇಡುತ್ತಿದ್ದವು. ಮೆಲ್ಲಗೆ ಹೋಗಿ ಹಲ್ಲುಜ್ಜಿ, ಮುಖ ತೊಳೆದು ಬಂದೆ. ಹೆರಿಗೆ ನೋವು ಶುರುವಾಗಿಯೇ ಬಿಟ್ಟಿತು… ಸಮುದ್ರದ ಅಲೆಯಂತಹ ನೋವದು. ಬಿಟ್ಟು ಬಿಟ್ಟು ಬರುತ್ತಿತ್ತು. ನಾವು ಆಸ್ಪತ್ರೆಗೆ ಹೊರಡಲು ತಯಾರಾದೆವು. ಆದರೆ ಎಷ್ಟು ಹೊತ್ತಾದರೂ ನೋವು ತೀವ್ರವಾಗಲಿಲ್ಲ. ಒಂಥರಾ ಭಯ ಒಂಥರಾ ಗಾಬರಿ… ಸರಿ ಎಂದು ಆಸ್ಪತ್ರೆಗೆ ಹೊರಟೆವು. ಐದು ವರ್ಷದ ಮಗನನ್ನು ಮನೆಯಲ್ಲಿ ಬಿಟ್ಟು ಹೋಗುವುದು ಎಂದುಕೊಂಡೆವು. ಆದರೆ ಅವನು ಯಾವುದೇ ಕಾರಣಕ್ಕೂ ಮನೆಯಲ್ಲಿ ಇರುವುದಿಲ್ಲ ಎಂದು ಹಟ ಹಿಡಿದ. ಗತ್ಯಂತರವಿಲ್ಲದೆ ಅವನನ್ನೂ ಕರೆದುಕೊಂಡು ಹೊರಟೆವು. ಅವನಿಗೋ ದೊಡ್ಡ ಕುತೂಹಲ. ಅಮ್ಮನ ಹೊಟ್ಟೆಯಿಂದ ಪಾಪು ಹೇಗೆ ಬರುತ್ತದೆ, ಪಾಪು ಹೇಗಿರುತ್ತದೆ ಎಂದು. ಸಾಲದ್ದಕ್ಕೆ ಅವನಿಗೆ ತಮ್ಮ ಬೇಕಾಗಿತ್ತು. ನಿನಗೆ ತಂಗಿ ಬೇಕೋ ತಮ್ಮ ಬೇಕೋ ಅಂತ ಯಾವಾಗ ಕೇಳಿದರೂ ನನಗೆ ತಮ್ಮನೇ ಬೇಕು ಎನ್ನುತ್ತಿದ್ದ. ನಾವೇ ಲ್ಲ ನಗುತ್ತಿದ್ದೆವು. ಆಸ್ಪತ್ರೆಗೆ ಹೋದಾಗ ಹೆಚ್ಚು ಕಡಿಮೆ ಸಂಜೆಯಾಗಿತ್ತು. ಹೋಗಿ ಅಡ್ಮಿಟ್ ಆದೆವು. ರಾತ್ರಿ ಹತ್ತಾದರೂ ಹೆರಿಗೆ ಆಗಲಿಲ್ಲ. ಮಗನಿಗೆ ನೀನು ಮಲಗು ಪುಟ್ಟಾ ಬೆಳಗ್ಗೆ ಹೊತ್ತಿಗೆ ಪಾಪು ಬಂದಿರುತ್ತದೆ, ಆಗ ನೋಡುವಿಯಂತೆ ಎಂದು ಎಷ್ಟು ಹೇಳಿದರೂ ಕೇಳುತ್ತಿಲ್ಲ. ಹಟ ಹಿಡಿದು ಕೂತಿದ್ದ. ತಮ್ಮ ಬಂದ ಮೇಲೆಯೇ ಮಲಗುತ್ತೇನೆ ಎಂದು. ನಂತರ ಡಾಕ್ಟರ್ ಬಂದು ಚೆಕಪ್  ಮಾಡಿ ಹೆರಿಗೆ ನಾರ್ಮಲ್ ಆಗುವುದಿಲ್ಲ ಸಿಸೇರಿಯನ್ ಮಾಡಬೇಕು ಎಂದರು. ಸರಿ ಎಲ್ಲ ಸಿದ್ಧವಾಯಿತು. ನನ್ನನ್ನು ಓಟಿ ಗೆ ಕರೆದೊಯ್ಯುತ್ತಿದ್ದರು, ಪಾಪ ಮಗನ ಮುಖ ಇಷ್ಟಾಗಿತ್ತು. ಆ ಕ್ಷಣ ಅವನ ಮುಖ ನೋಡುವಾಗ ಸಧ್ಯ ಎಲ್ಲ ಸುಗಮವಾಗಿ ಆದರೆ ಸಾಕಪ್ಪಾ ಎಂದು ದೇವರಲ್ಲಿ  ಬೇಡಿಕೊಳ್ಳಬೇಕೆನಿಸಿತು. ಅಂತೂ ಎಲ್ಲ ಸಸೂತ್ರ ಆಯಿತು. ಆದರೆ ಮಗನ ಆಸೆ ಮಾತ್ರ ಈಡೇರಲಿಲ್ಲ. ತಮ್ಮನ ಬದಲಾಗಿ ತಂಗಿ ಬಂದಳು. ಅನೆಸ್ತೀಶಿಯ ನೀಡಿದ್ದರಿಂದ ದೇಹ ಇನ್ನು ಅದರ ಪ್ರಭಾವದಿಂದ ಹೊರಬಂದಿರಲಿಲ್ಲ. ಅಕ್ಷರಶಃ ಹೆಣದ ರೀತಿಯಲ್ಲಿ ಓಟಿಯಿಂದ ವಾರ್ಡಿಗೆ ಶಿಫ್ಟ್ ಮಾಡಿದರು. ಇದನ್ನೆಲ್ಲ ನೋಡುತ್ತಿದ್ದ ಮಗನಿಗೆ ಎಷ್ಟು ಭಯವಾಯಿತೋ… ಪಾಪ ಕಣ್ಣಲ್ಲಿ ನೀರು ತುಂಬಿತ್ತ. ಬಾರೋ ಇಲ್ಲಿ… ಹತ್ರ ಬಾರೋ… ನೋಡಿಲ್ಲಿ ನಂಗೇನು ಆಗಿಲ್ಲ ಅಂತ ಕರೆದೆ. ಪಾಪ ಪೆಚ್ಚು ಪೆಚ್ಚಾಗಿ ಬಂದು ಕುಳಿತುಕೊಂಡ. ಅವನ ಮೈತಡವಿದೆ, ಮುದ್ದು ಮಾಡಿದೆ. ಆಮೇಲೆ ನೋಡೋ ನಿನ್ನಚತಂಗಿ ಬಂದಿದಾಳೆ ಅಂದೆ. ಎಲ್ಲರೂ ನಗಲು ಶುರು ಮಾಡಿದರು. ಅಯ್ಯೋ ಪಾಪ ಸಿದ್ಧಾಂತನಿಗೆ ತಂಗಿ ಬರಲಿಲ್ಲ…. ಎಂದು ಗೇಲಿ ಮಾಡಿದರು. ಅವನಿಗೂ ನಗು ಬಂತು. ಅವನಿಗೆ ಪಾಪುವನ್ನು ನೋಡುವುದೇ ಸಂಭ್ರಮ ಎನಿಸಿಬಿಟ್ಟಿತ್ತು. ಅವನಿಗಿದ್ದಿದ್ದೆಲ್ಲ ಒಂದೇ ತಂಗಿಯಾದರೆ ನನ್ನವಜೊತೆ ಆಡಲು ಬರುವುದಿಲ್ಲ ತಮ್ಮನಾದರೆ ನನ್ನ ಜೊತೆ ಆಡಲು ಬರುತ್ತಾನೆ ಎಂದು. ಆದರೆ ಹೊಸ ಪಾಪುವುನ ಮುಖ ನೋಡಿದಾಕ್ಷಣ ಅದೆಲ್ಲವೂ ಗಾಳಿಗೆ ತೂರಿ ಹೋಯಿತು. ತಂಗಿಯ ಮುಖ ನೋಡಿಯಾದ ಮೇಲೆಯೇ ಅವ ಮಲಗಿದ್ದು. ಮರುದಿನ ಸರಿ ತಂಗಿ ಬಂದಾಯಿತಲ್ಲ ಮನೆಗೆ ಹೋಗೋಣ ನಡಿಯೋ ಎಂದರೆ ಕೇಳುತ್ತಲೇ ಇಲ್ಲ ನಾನೂ ತಂಗಿಯ ಜೊತೆಯೇ ಇರುತ್ತೇನೆ ಎಂದು ಹಟ ಹಿಡಿದ. ಹಂಗೂ ಹಿಂಗೂ ಮಾಡಿ ಮೂರು ದಿನ ಆಸ್ಪತ್ರೆಯಲ್ಲೇ ಕಳೆದ. ನಾಲ್ಕನೇ ದಿನ ಯಾಮಾರಿಸಿ ಅವನನ್ನು ಮನೆಗೆ ಕಳಿಸಿದ್ದೆವು. ಈಗಲೂ ಅದನ್ನೆಲ್ಲ ನೆನೆದರೆ ವಿಪರೀತ ನಗು ಬರುತ್ತದೆ. ಈಗಂತೂ ಮಗಳಿಗೆ ಮೂರು ವರ್ಷ. ಇಬ್ಬರೂ ಒಮ್ಮೊಮ್ಮೆ ಪರಮಾಪ್ತ ಗೆಳೆಯರು ಒಮ್ಮೊಮ್ಮೆ ಹಾವು ಮುಂಗಸಿಗಳು. ಒಂದಂತೂ ಅಚ್ಚರಿ ನನಗೆ ಮಕ್ಕಳ ಮುಗ್ಧತೆ ಕುತೂಹಲ ಯಾಪರಿ ಇರುತ್ತದಲ್ಲಾ ಎಂದು. ಅಂದು ಮನೆಯಲ್ಲಿ ಹಬ್ಬವಿತ್ತು. ಮಗ ಪದೇ ಪದೇ ಕಿತಾಪತಿ ಮಾಡುತ್ತಿದ್ದ. ತಂಟೆ ಮಾಡುತ್ತಾನೆಂದು ಮಗನನ್ನು ಅದು ಮಾಡಬೇಡ ಇದು ಮಾಡಬೇಡ ಅಂತ ಪದೇ ಪದೇ ಅನ್ನುತ್ತಿದ್ದೆವು. ಇದರಿಂದ ಬಹುಶಃ ಅವನಿಗೆ ಬೇಸರವಾಗಿರಬೇಕು. ನಂತರ ಅಲ್ಲಿಂದ ಅವ ಹೊರಟುಹೋದ. ಸುಮಾರು ಹೊತ್ತಾದರೂ ಅವ ಎಲ್ಲೂ ಕಾಣಿಸಲಿಲ್ಲ. ನಮ್ಮದೆಲ್ಲ ಕೆಲಸ ಆದಮೇಲೆ ಎಲ್ಲಿ ಹೋದ ಅಂತ ನೋಡಿದರೆ ಪಕ್ಕದ ಪ್ಯಾಸೇಜಿನಲ್ಲಿ ಇದ್ದಾನೆ! ನೋಡಿದರೆ ತನ್ನ ಯೂನಿಫಾಮ್ ಶೂಗಳನ್ನು ನೀಟಾಗಿ ತೊಳೆದು ಅದಕ್ಕೆ ವಿಭೂತಿ, ಗಂಧ, ಅರಶಿಣ, ಕುಂಕುಮ ಹಚ್ಚಿ ಉದುಕಡ್ಡಿ ಬೆಳಗುತ್ತಿದ್ದಾನೆ! ಯಪ್ಪಾ ಅವತ್ತಿನಷ್ಟು ನಾವೆಲ್ಲ ಎಂದೂ ನಕ್ಕಿರಲಿಲ್ಲ ಕಾಣುತ್ತದೆ. ತನ್ನ ಪಾದುಕೆಯ ಪೂಜೆಯನ್ನು ತಾನೇ ಮಾಡಿಕೊಂಡ ಮಹಾನುಭಾವ ಅವನು…. ಮೊನ್ನೆ ನನ್ನ ಪುಟ್ಟ ಮಗಳು ನಾನೂ ಅಡುಗೆ ಮಾಡ್ತೀನಿ ಅಂತ ಹೇಳಿ ಹಟ ಮಾಡಿ ಕಿಚನ್ ಸೆಟ್ (ಆಟದ ಕಿಚನ್ ಸೆಟ್) ಕೊಡಿಸಿಕೊಂಡು ತಂದುಕೊಂಡಳು. ಮನೆಗೆ ಬಂದು ಅಡುಗೆ ಮಾಡಿದ್ದೇ ಮಾಡಿದ್ದು… ಮರು ದಿನ ತರಕಾರಿ ತೆಗೆದುಕೊಳ್ಳಲಿಕ್ಕೆಂದು ಫ್ರಿಜ್ ತೆಗೆದ ನನಗೆ ಕಂಡದ್ದು ಮಾತ್ರ ಆಶ್ಚರ್ಯ. ಅದ್ಯಾವಾಗಲೋ ಗೊತ್ತಿಲ್ಲ ಮಗಳು ತನ್ನ ಪ್ಲಾಸ್ಟಿಕ್ ತರಕಾರಿಗಳನ್ನು ತನ್ನ ಪುಟ್ಟ ಪ್ಯಾನ್ ಒಂದಕ್ಕೆ ಹಾಕಿ ಫ್ರಿಜ್ಜಿನಲ್ಲಿ ಇಟ್ಟಿದ್ದಳು. ಅವಳ ಪಪ್ಪನನ್ನೂ ಕರೆದು ತೋರಿಸಿದೆ. ಇಬ್ಬರೂ ನಕ್ಕೆವು. ಅವಳ ಮುಗ್ಧತೆ ಮತ್ತು ಜಾಣ್ಮೆಗೆ ಮುದ್ದುಕ್ಕಿ ಬಂತು… ಮಕ್ಕಳಿಗೆ ಹೇಗೆ ಇವೆಲ್ಲ ಹೊಳೆಯುತ್ತವೆ ಎಂದು ಸದಾ ಆಶ್ಚರ್ಯವಾಗುತ್ತಿರುತ್ತದೆ ನನಗೆ. ಅದರಲ್ಲೂ ಸದಾ ಮಕ್ಕಳ ಜೊತೆಯೇ ಕಾಲ ಕಳೆಯುವ ನಮ್ಮಂಥವರಿಗೆ ಇಂತಹ ಅನುಭವಗಳು ನಿತ್ಯವೂ ಆಗುತ್ತಿರುತ್ತವೆ. ನಾವು ಎಷ್ಟೇ ತಿಳಿದವರಾಗಿದ್ದರೂ ಮಕ್ಕಳ ಮುಗ್ಧತೆಯ ಮುಂದೆ ಸೋತುಬಿಡುತ್ತೇವೆ. ನಮ್ಮ ಗತ್ತು, ಅಹಂಕಾರ, ದೊಡ್ಡತನ…. ಎಲ್ಲವೂ ಮಕ್ಕಳ ಮುಂದೆ ಮಂಡಿಯೂರುತ್ತವೆ. ನಾವು ನಮ್ಮನ್ನು ಕಳೆದುಕೊಂಡುಬಿಡುತ್ತೇವೆ ಅವರ ಮುಂದೆ. ಮಕ್ಕಳು ಮಾತ್ರ ಹೀಗಿರಲು ಸಾಧ್ಯವೇನೋ ಅಲ್ಲವಾ… ಕಲ್ಲುಸಕ್ಕರೆಯಂತಹ ಇಂಥ ಅನುಭವಗಳು ಸದಾ ನಮ್ಮ ಬದುಕಿನ ತಿಜೋರಿಯನ್ನು ತುಂಬಿಕೊಳ್ಳುತ್ತಿರಲಿ ಎನ್ನುವ ಆಸೆಯೊಂದು ಮಾತ್ರ ಸದಾ ಜೀವ ಹಿಡಿದು ಕೂರುತ್ತದೆ… ************* –ಆಶಾ ಜಗದೀಶ್ ಶಿಕ್ಷಕಿ, ಗೌರಿಬಿದನೂರಿನಲ್ಲಿ ವಾಸಮೊದಲ ಪುಸ್ತಕ ಮೌನ ತಂಬೂರಿ- ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಹೊಂಡಿದೆ. ನಾದಾನುಸಂಧಾನ- ಅಂಕಣ ಬರಹದ ಪುಸ್ತಕ, ಮಳೆ ಮತ್ತು ಬಿಳಿಬಟ್ಟೆ- ಕಥಾ ಸಂಕಲನ ಮತ್ತು ನಡು ಮಧ್ಯಾಹ್ನದ ಕಣ್ಣು- ಕವನ ಸಂಕಲನ (ಅಚ್ಚಿನಲ್ಲಿದೆ) ಈ ವರ್ಷ ಹೊರಬರಲಿರುವ ಪುಸ್ತಕಗಳು. ಕರ್ನಾಟಕ ಲೇಖಕಿಯರ ಸಂಘದ ಗುಡಿಬಂಡೆ ಪೂರ್ಣಿಮಾ ದತ್ತಿನಿಧಿ ಬಹುಮಾನ, ಪ್ರಜಾವಾಣಿ ದೀಪಾವಳಿ ಕವನ ಸ್ಪರ್ಧೆಯಲ್ಲಿ ಮೆಚ್ಚುಗೆ ಗಳಿಸಿದ ಕವಿತೆ, ಜೀವನ್ ಪ್ರಕಾಶನದ ಯುಗಾದಿ ಕವನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಪ್ರಜಾವಾಣಿ ಸಂಕ್ರಾಂತಿ ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಸುಧಾ ಯುಗಾದಿ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಬಹುಮಾನ, ಮುಂಬೈನ ಶ್ರೀ ಜಗಜ್ಯೋತಿ ಕಲಾಸಂಘ ನೀಡುವ ಸುಶೀಲಾ ಶೆಟ್ಟಿ ಕಥಾ ಪ್ರಶಸ್ತಿ… ಇನ್ನು ಮುಂತಾದ ಬಹುಮಾನಗಳು ಬಂದಿವೆ.

Read Post »

ಇತರೆ, ಜೀವನ

ಯಶಸ್ಸು ಮತ್ತು ಸಾಧನೆ

ಲೇಖನ ಯಶಸ್ಸು ಮತ್ತು ಸಾಧನೆ ಮಾಲಾ ಕಮಲಾಪುರ್ ಪ್ರತಿಯೊಬ್ಬ ಮನುಷ್ಯನು ಯಶಸ್ಸನ್ನು ಬಯಸುತ್ತಾನೆ. ಅತ್ತ್ಯುತ್ತಮ ಗುಣ ಮಟ್ಟದ ಜೀವನ ವನ್ನು ಅನುಭವಿಸಲು ಹಂಬಲಿಸುತ್ತಾನೆ. ಆದರೆ ಅದನ್ನು ಸಾಧಿಸಿ ಅಂಥ ಜೀವನ ನಡೆಸುವವರು ಕೆಲವರು ಮಾತ್ರ ಬಲವಾದ ನಂಬಿಕೆ ವಿಶ್ವಾಸ ಇದ್ದವರು ಹಿಡಿದ ಕಾರ್ಯ ವನ್ನು ಸಾಧಿಸಿಯೇ ತೀರುತ್ತಾರೆ. ಇಂಥವರಿಗೆ ಕಾಲು ಎಳೆಯುವವರು ಸಾವಿರಾರು.ಎಲ್ಲಿ ಸಾಧನೆ ಮಟ್ಟ ಇರುತ್ತದೆಯೋ ಅಲ್ಲಿ ಟೀಕಿಸುವವರು ನಮ್ಮ ಹಿಂದೆಯೇ ಇರುವರು . ನಾವುಹಿಂದೆ ನೋಡದೆ ಮುಂದೆ ಸಾಗುತ್ತ ಹೋಗಬೇಕು ಹಿತೈಷಿಗಳ ಮಾರ್ಗ ದರ್ಶನಇದ್ದರೆ ಸಾಕು ನಾವು ಗುರಿ ಮುಟ್ಟುವುದರಲ್ಲಿ ಸಂಶಯವೇ ಇಲ್ಲಾ.ಅಬ್ರಹಾಂಲಿಂಕನ್ ಜೀವನದಲ್ಲಿ ಸಾಕಷ್ಟು ನೋವು ಸಂಕಟ ಜನರ ಅಸೂಹೆ ಇವೆಲ್ಲದರ ನಡುವೆ ದೃತಿ ಗೆಡದೆ ಸಂಪೂರ್ಣ ಆತ್ಮ ವಿಶ್ವಾಸ ದಿಂದ ತಮ್ಮ ಗುರಿ ತಲುಪಿದರು.ಮುಖ್ಯ ವಾಗಿ ನಮ್ಮಲ್ಲಿ ಪ್ರಾಮಾಣಿಕತೆ ಇದ್ದು ಸರಳ ಭಾವನೆ ಇದ್ದಾಗ ನಮಗೆ ದೇವರಲ್ಲಿ ಅಚಲವಾದ ಭಕ್ತಿ ವಿಶ್ವಾಸ ಇದ್ದರೆ ನಾವು ನಮ್ಮ ಗುರಿ ಮುಟ್ಟುತ್ತೇವೆ.ವಿನಯ ಮತ್ತು ಸೌಜನ್ಯ ಸ್ವಭಾವ ನಮ್ಮ ಮನಸಿನ ಕನ್ನಡಿ ನಾವು ಮತ್ತೊಬ್ಬರಾಗುವದು ಬೇಡ ನಾವು ನಾವಾದರೆ ಸಾಕು ನಮ್ಮ ಜೀವನ ದಲ್ಲಿ ಅದೆಷ್ಟೋ ಆನಂದ ಅನುಭವಿಸುತ್ತವೆ. ಇದನ್ನು ನೋಡಿ ಕೆಲವರು ಅಸೂಹೆ ಮಾಡಿ ಕುಹಕ ನಗು ತೋರಿಸಿದರು ನಾವು ನಿರ್ಲಕ್ಷಿಸಬೇಕು ಅದೊಂದೇ ದಾರಿ. ಮುಖ್ಯವಾಗಿ ನಾವು ಮಾಡುವ ಕೆಲಸ ಕಾರ್ಯ ಮತ್ತು ಯಾವುದೇ ವಿದ್ಯೆ ಯಲ್ಲಿ ವಿಚಾರದಲ್ಲಿ ನಿಖರ ಮತ್ತು ದಿಟ್ಟ ವಿಚಾರವೇ ನಮಗೆ ಇದ್ದರೆ ಸಾಕು. ನಮ್ಮಲ್ಲಿ ಆತ್ಮ ವಿಶ್ವಾಸವೇ ನಮ್ಮನ್ನು ಎತ್ತಿ ಹಿಡಿಯುತ್ತದೆ. ನಾವು ಯಾವುದೇ ಸನ್ಮಾರ್ಗದಲ್ಲಿ ಇದ್ದಾಗ ನಮ್ಮ ಮನಸು ಯಾರಿಗೂ ಬಗ್ಗುವುದಿಲ್ಲ ನಾವು ಯಾವುದೇ ಕಲೆ ಮತ್ತು ವಿದ್ಯೆ ಕಲಿಯಬೇಕಾದರೆ ವಯಸ್ಸು ಬೇಕಾಗಿಲ್ಲ ನಮ್ಮ ದೇಹಕ್ಕೆ ವಯಸ್ಸಾದರೂ ನಮ್ಮ ಮನಸ್ಸಿಗೆ ಆಗಿರುವುದಿಲ್ಲ. ನಮ್ಮಲ್ಲಿ ಸದ್ರಡ ಮನಸ್ಸು ವಿವೇಚನಾ ಶಕ್ತಿ, ಸಾಧಿಸುವ ಸಂಕಲ್ಪವೇ ನಮ್ಮ ಯಶಸ್ಸಿನ ಮೆಟ್ಟಲುಗಳು.ಇದಕ್ಕೆ ಉದಾಹರಣೆ ಯಾಗಿ ನೋಡಬೇಕೆಂದರೆ ಅಕ್ಷರ ಕಲಿಯದೆ ನಿಸ್ವಾರ್ಥ ಮನಸ್ಸಿನಿಂದ ಸೇವೆ ಮಾಡಿದ ಸಾಲು ಮರದ ತಿಮ್ಮಕ್ಕ ಅದೆಷ್ಟು ಗಿಡ ಮರಗಳನ್ನು ಮಕ್ಕಳಂತೆ ಪ್ರೀತಿಸಿ ಬೆಳೆಸಿದವರು ಮುಪ್ಪು ವಯಸ್ಸಿನಲ್ಲೂ ಹುರುಪು ಅವರಿಗೆ.ಅವರ ಸೇವೆ ಇಡೀ ಜಗತ್ತು ಬೆರಗಾಗುವಂತೆ ನೋಡುತ್ತಿದೆ. ಹಿಂದೆ ನಮ್ಮೆಲ್ಲರ ಪೂರ್ವಜರು ಯಾವುದೇ ಪೈಪೋಟಿ ಮಾಡದೇ ಅಚಲ ನಿರ್ಧಾರ ಮತ್ತು ನಿಷ್ಕಲ್ಮಶ ಮನಸ್ಸು, ನಿಸ್ವಾರ್ಥ ಸೇವಾ ಮನೋಭಾವದಿಂದ, ಯಾರಿಗೂ ಮನಸ್ಸನ್ನು ನೋಯಿಸದೆ ಬದುಕಿನಲ್ಲಿ ತನ್ನದೇ ಛಾಪು ಮೂಡಿಸಿದವರು.ನಾವು ಸಮಯಕ್ಕೆ ಮತ್ತು ನಮಗೆ ದಾರಿತೋರಿಸುವ ಗುರುಗಳಿಗೆ ಬೆಲೆ ಕೊಟ್ಟಾಗ ನಮ್ಮ ಜೀವನ ಸ್ವಲ್ಪ ಮಟ್ಟಿಗಾದರೂ ಸಾರ್ಥಕವಾದಿತು.ನಾವು ಒಂದಿಷ್ಟು ಅವರ ಮಾರ್ಗ ದಲ್ಲಿ ಸಾಗೋಣ. ಇದ್ದುದರಲ್ಲಿ ನೈಜ ಸುಖ, ಶಾಂತಿ ಪಡೆಯೋಣ.ಸಾತ್ವಿಕ ವಿಚಾರ, ಸಂತೃಪ್ತಿ ಮತ್ತು ಸಕಾರಾತ್ಮ ವಿಚಾರ ಇವು ನಮ್ಮ ಯಶಸ್ಸಿಗೆ ಬೆಳಕು ತೋರಿಸುವ ದಾರಿ ದೀಪಗಳೆಂದರೆ ತಪ್ಪಾಗದು. ********************************

ಯಶಸ್ಸು ಮತ್ತು ಸಾಧನೆ Read Post »

ಪುಸ್ತಕ ಸಂಗಾತಿ

ಪುಸ್ತಕ ಬಿಡುಗಡೆ

ಪುಸ್ತಕ ಸಂಗಾತಿ ‘ಗೌರಿಯೊಂದಿಗೆ ಏಕಾಂತ_ಲೋಕಾಂತ‘ ಸ್ನೇಹಿತರೆ…ಗೌರಿಯೊಂದಿಗೆ ಏಕಾಂತ_ಲೋಕಾಂತ ಪುಸ್ತಕ ಬಿಡುಗಡೆಯ ಆಹ್ವಾನ ಪತ್ರಿಕೆ ಇಲ್ಲಿದೆ. ಆಸಕ್ತರೆಲ್ಲರೂ ಸಮಯ ಸರಿದೂಗಿಸಿಕೊಂಡು ನಮಗೆ ಜೊತೆಯಾಗಿ…!! ಭೇಟಿಯಾಗಿ ಬಾಂಧವ್ಯ ಬೆಸೆದುಕೊಳ್ಳುವ. ಪ್ರೀತಿಯಿಂದ- ಚಾರು ಪ್ರಕಾಶನ ಒಟ್ಟು ಪುಟಗಳು 200ಬೆಲೆ ರೂ 150/- ಪ್ರತಿಗಳಿಗಾಗಿ ಸಂಪರ್ಕಿಸಿ94483806379380788349080-266603037.Charu PrakashanaCurrent Account number64054262366IFSC Code SBI no 040014State Bank Of India.Basavanagudi BranchBengaluru 560004 Parvateesh Bilidaale Charu Prakashana No 83, 3rd Floor Pride plaza building 5th Main Near Adarsha College T R Mill Road Chamaraja pete Bangaluru_560018 Phone 080 _26603637Mobile 9448380637. *********************************************************************** ರಾಜೇಶ್ವರಿ ಭೋಗಯ್ಯ

ಪುಸ್ತಕ ಬಿಡುಗಡೆ Read Post »

You cannot copy content of this page

Scroll to Top