ಪುಸ್ತಕ ಬಿಡುಗಡೆ
ಪುಸ್ತಕ ಬಿಡುಗಡೆಗೆ ಬನ್ನಿ
ಅಂಜಲಿ ರಾಮಣ್ಣ ಬರೆಯುತ್ತಾರೆ
ಇದು ನನಗೆ ಕಲಿಸಿದ್ದು ಎರಡು ಪಾಠ. ಒಂದು ಹೆಂಗಸು ಮನಸ್ಸು ಮಾಡಿದರೆ, ಬುದ್ಧಿಯ ಮೂಲಕ ಗಳಿಸಿಕೊಂಡ ಆತ್ಮವಿಶ್ವಾಸ ಇದ್ದರೆ ಯಾರದ್ದೇ ಆಗಿರಲಿ, ಯಾವುದೇ ರೀತಿಯ ಮುಜುಗರವನ್ನು ಹೋಗಲಾಡಿಸಬಲ್ಲಳು
ಕಾನೂನು, ಮಹಿಳೆ ಮತ್ತು ಅರಿವು Read Post »
ಜಯಶ್ರೀ ಭಂಡಾರಿ
ಆರಕ್ಕೆರದ ಮೂರಕ್ಕಿಳಿಯದ ಬದುಕ ತೇರು
ಸಂಭ್ರಮ ಸಾಂಗತ್ಯ ನನಗೀಗ ಬೇಜಾರು
ಯಾಕೆ ಬಂದೆ ಸುಮ್ಮನೆ.. Read Post »
ಲೇಖನ ನೀರು ಕುಡಿಯಿರಿ ಆಶಾ ಸಿದ್ದಲಿಂಗಯ್ಯ ಜನರು ತಮ್ಮ ಬ್ಯುಸಿ ಶೆಡ್ಯೂಲ್ ನಲ್ಲಿ ನೀರನ್ನು ಕುಡಿಯುವುದೇ ಮರೆತಿದ್ದಾರೆ ಆದರೆ ನೀರು ಆರೋಗ್ಯಕ್ಕೆ ಅತ್ಯವಶ್ಯಕ.. ನಮ್ಮ ಉಳಿವಿಗಾಗಿ ನೀರು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಬಾಯಾರಿಕೆಯನ್ನು ನೀಗಿಸುವುದಕ್ಕೆ ಮಾತ್ರವಲ್ಲ, ದೇಹ ಸರಿಯಾಗಿ ಕೆಲಸ ಮಾಡಲು ಹಾಗೂ ರೋಗ ಮುಕ್ತವಾಗಿಡಲು ನೀರು ಅಗತ್ಯ. ದೇಹದ ತೂಕ ಇಳಿಸಲು ಸಹ ನೀರು ಕುಡಿಯುವುದು ಸಹಾಯಕಾರಿ. ಬಿಸಿನೀರು ಕುಡಿದರೆ ದೇಹದ ತೂಕ ಕಡಿಮೆ ಆಗಲು ಸಹಾಯ ಆಗುತ್ತಾ? ನಮ್ಮ ದೇಹದ ಸುಮಾರು 70% ರಷ್ಟು ನೀರಿನಿಂದ ಕೂಡಿದೆ ಹಾಗೂ ದೇಹದ ವ್ಯವಸ್ಥೆಯು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ, ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯು ಪ್ರತಿದಿನ 2-3 ಲೀಟರ್ ನೀರನ್ನು ಸೇವಿಸುವುದು ಅತ್ಯಗತ್ಯ. ತಣ್ಣನೆ ಮತ್ತು ಬಿಸಿನೀರು ಎರಡೂ ತಮ್ಮದೇ ಆದ ಬಾಧಕಗಳನ್ನು ಹೊಂದಿವೆ. ತೀವ್ರವಾದ ವರ್ಕೌಟ್ ನಂತರ ತಣ್ಣಗಾಗಲು ಒಂದು ಲೋಟ ತಣ್ಣೀರು ನಿಮಗೆ ಸಹಾಯ ಮಾಡುತ್ತದೆ, ಆದರೆ ಬಿಸಿನೀರು ದೇಹದಿಂದ ಟಾಕ್ಸಿನ್ ಹೊರಹಾಕಲು ಸಹಾಯ ಮಾಡುವುದರೊಂದಿಗೆ ಆಹಾರವನ್ನು ಉತ್ತಮವಾಗಿ ಜೀರ್ಣಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಇದಲ್ಲದೆ, ಕುಡಿಯುವ ನೀರು ವಿಶೇಷವಾಗಿ ಬಿಸಿನೀರು ತೂಕ ಕರಗಿಸಲು ಸಹಾಯ ಮಾಡುತ್ತದೆ. ಅದು ನಿಜವೇ? ಹೆಚ್ಚು ನೀರು ಕುಡಿಯುವುದರಿಂದ ಒಬ್ಬ ವ್ಯಕ್ತಿಯು ತೂಕ ಕಳೆದು ಕೊಳ್ಳುತ್ತಾನೆ. ಇದಕ್ಕೆ ಕಾರಣವೆಂದರೆ ನೀರು ಹೊಟ್ಟೆ ತುಂಬಿರುವ ಫೀಲ್ ನೀಡುತ್ತದೆ, ಪೋಷಕಾಂಶಗಳನ್ನು ಹೀರಿಕೊಳ್ಳಲು ದೇಹಕ್ಕೆ ಸಹಕರಿಸುತ್ತದೆ. ವಿಷಕಾರಿ ತ್ಯಾಜ್ಯವನ್ನು ಹೊರಹಾಕುತ್ತದೆ, ಎಂದು ಸಂಶೋಧನೆಯೊಂದು ಹೇಳಿದೆ. 2003ರಲ್ಲಿ ಪ್ರಕಟವಾದ ಮತ್ತೊಂದು ಅಧ್ಯಯನದ ಪ್ರಕಾರ, ಬಿಸಿನೀರನ್ನು ಕುಡಿಯುವುದರಿಂದ ತೂಕ ಇಳಿಸುವ ಪ್ರಕ್ರಿಯೆಯನ್ನು ಹೆಚ್ಚಿಸಬಹುದು. ಊಟಕ್ಕೆ ಮುಂಚಿತವಾಗಿ 500 ಮಿಲಿ ನೀರನ್ನು ಕುಡಿಯುವುದು ಮೆಟಾಬಾಲಿಸಮ್ 30% ಹೆಚ್ಚಿಸುತ್ತದೆ. ಪ್ರತಿದಿನ ಬೆಳಿಗ್ಗೆ ಅಥವಾ ದಿನವಿಡೀ ಬಿಸಿ ಅಥವಾ ಬೆಚ್ಚಗಿನ ನೀರನ್ನು ಕುಡಿಯುವುದರಿಂದ ತೂಕ ಇಳಿಸುವ ಪ್ರಕ್ರಿಯೆಗೆ ಮೂರು ವಿಧಗಳಲ್ಲಿ ಸಹಾಯವಾಗುತ್ತದೆ. ಬಿಸಿನೀರು ಕುಡಿಯುವುದರಿಂದ ನಿಮ್ಮ ದೇಹದ ಉಷ್ಣತೆ ಬದಲಾಗುತ್ತದೆ. ನೀರಿನ ಬೆಚ್ಚಗಿನ ತಾಪಮಾನವನ್ನು ಸರಿದೂಗಿಸಲು, ನಮ್ಮ ದೇಹವು ಆಂತರಿಕ ತಾಪಮಾನವನ್ನು ಕಡಿಮೆ ಮಾಡುತ್ತದೆ ಮತ್ತು ಚಯಾಪಚಯವನ್ನು ಸಕ್ರಿಯಗೊಳಿಸುತ್ತದೆ. ದೇಹದಲ್ಲಿನ ಕೊಬ್ಬನ್ನು ಒಡೆಯುತ್ತದೆ ಮತ್ತು ಅವುಗಳನ್ನು ಅಣುಗಳಾಗಿ ಪರಿವರ್ತಿಸುತ್ತದೆ, ಇದರಿಂದಾಗಿ ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಫ್ಯಾಟ್ ಬರ್ನ್ ಸುಲಭಗೊಳಿಸುತ್ತದೆ. ಹಸಿವನ್ನು ನೀಗಿಸಲು ಬೆಚ್ಚಗಿನ ನೀರು ಸಹಾಯ ಮಾಡುತ್ತದೆ. ನಿಮ್ಮ ಊಟಕ್ಕೆ 30 ನಿಮಿಷಗಳ ಮೊದಲು ಒಂದು ಲೋಟ ಬೆಚ್ಚಗಿನ ನೀರನ್ನು ಕುಡಿದರೆ ನಿಮ್ಮ ಕ್ಯಾಲೊರಿ ಬರ್ನ್ ಆಗುವುದರಲ್ಲಿ ಅನುಮಾನವೇ ಇಲ್ಲ. ಜೀರ್ಣಕ್ರಿಯೆಯ ಪ್ರಕ್ರಿಯೆಯ ಸುಗಮವಾಗಿಸಲು ನೀರು ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ನಮಗೆ ಜೀರ್ಣಿಸಿಕೊಳ್ಳಲು ಕಷ್ಟಪಡುವ ಆಹಾರ ಕಣಗಳನ್ನು ಸಹ ಕರಗಿಸಿ ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ. ಬಿಸಿನೀರು ನರಮಂಡಲವನ್ನು ಶಾಂತಗೊಳಿಸುತ್ತದೆ. ನಮ್ಮ ನರಮಂಡಲವು ಶಾಂತವಾಗಿದ್ದಾಗ, ನಾವು ಕಡಿಮೆ ನೋವುಗಳನ್ನು ಅನುಭವಿಸುವುದಲ್ಲದೆ, ದಿನವಿಡೀ ಶಾಂತವಾಗಿರಲು ನಮಗೆ ಸಹಾಯ ಮಾಡುತ್ತದೆ. ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಬಿಸಿನೀರು ನಿಮ್ಮ ಕರುಳನ್ನು ಸಂಕುಚಿತಗೊಳಿಸುತ್ತದೆ, ಇದು ಕರುಳಿನಲ್ಲಿನ ಅಡಚಣೆಯನ್ನು ಕಡಿಮೆ ಮಾಡಿ ಮಲ ವಿಸರ್ಜನೆ ಸುಲಭಗೊಳಿಸುತ್ತದೆ. ಕುಡಿಯುವ ನೀರು ವ್ಯಕ್ತಿಯ ದೇಹದ ಉಷ್ಣತೆಯನ್ನು ಹೆಚ್ಚಿಸಿ ಬೆವರುವಂತೆ ಮಾಡುತ್ತದೆ. ಬೆವರುವಿಕೆಯ ರಂಧ್ರಗಳಿಂದ ಟಾಕ್ಸಿನ್ ಹೊರಹಾಕುತ್ತದೆ ************************************************************************
ಅಂಕಣ ಬರಹ ಜೀವ ಜಂತುಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಕಥೆ ಹುಟ್ಟುತ್ತದೆ “ ಸುರೇಶ್ ಹೆಗಡೆ ಪರಿಚಯ: ಸುರೇಶ್ ಹೆಗಡೆ ಹೊನ್ನಾವರದ ಕರ್ಕಿ ಗ್ರಾಮದವರು .1952 ಜನನ. ಇವರ ತಂದೆ ಚಂದ್ರ ಮಾಸ್ತರ ಇವರ ಗುರು. ಹೊನ್ನಾವರ ಕಾಲೇಜಿನಿಂದ ವಿಜ್ಞಾನದ ವಿಷಯದಲ್ಲಿ ಪದವಿ ಪಡೆದರು. 1973 ರಲ್ಲಿ ಕರ್ನಾಟಕ ವಿದ್ಯುತ್ ನಿಗಮದಲ್ಲಿ 38 ವರ್ಷ ನೌಕರಿ ಮಾಡಿ ನಿವೃತ್ತರಾಗಿದ್ದಾರೆ. ಕತೆ ಬರೆಯುತ್ತಿದ್ದ ಇವರು ,ಅವುಗಳನ್ನು ಪ್ರಕಟಿಸಿದ್ದು, ನಿವೃತ್ತಿ ನಂತರ. 2020 ರಲ್ಲಿ ಇವರ ಮೊದಲ ಕಥಾ ಸಂಕಲನ ಇನಾಸ ಮಾಮನ ಟಪಾಲು ಚೀಲ ಪ್ರಕಟವಾಯಿತು. ಇದೇ ಹೆಸರಿನ ಕತೆ ಸಹ ತುಂಬಾ ಸೂಕ್ಷ್ಮ, ಸರಳವಾಗಿದೆ. ಚಿಕ್ಕಂದಿನಿಂದ ಯೌವ್ವನ ಕಾಲದ ಓದು ಇವರನ್ನು ಮಾಗಿಸಿದೆ. ಸುಧಾ ಮಯೂರ ಗಳಲ್ಲಿ ಬರೆಯುತ್ತಿದ್ದ ಇವರು , ನಾಟಕ ಅಭಿನಯದ ಹವ್ಯಾಸ ಸಹ ಹೊಂದಿದ್ದಾರೆ. ಆಕಾಶವಾಣಿಯಲ್ಲಿ ಸಹ ಭಾಗವಹಿಸುವಿಕೆ ಇದೆ. ನೆನಪುಗಳನ್ನು ಹೆಕ್ಕಿ ಬರೆಯುವ ಜಾಣತನ ಇವರಿಗೆ ಸಿದ್ಧಿಸಿದೆ. ಮಾನವೀಯ ಗುಣದ ಸುರೇಶ್ ಹೆಗಡೆ ಅವರು ಜಾತಿಯನ್ನು ಮೀರಿದ ಮನುಷ್ಯತ್ವ ಹೊಂದಿದವರು ಎಂಬುದು ಮುಖ್ಯ. ………… ೧) ಕತೆಗಳನ್ನು ಯಾಕೆ ಬರೆಯುತ್ತೀರಿ? ಮುಖ್ಯವಾಗಿ ನಾನು ಕತೆಗಳನ್ನು ಬರೆಯುವುದು ನನ್ನೊಳಗಣ ತುಡಿತಕ್ಕಾಗಿ (urges) ಯಾವುದಾದರೂ ಗಳಿಗೆಯಲ್ಲಿ ಹೊಸ ವಿಚಾರ ಹೊಳೆದಾಗ, ನನ್ನೊಳಗಣ ಹುಕಿ ಎಬ್ಬಿಸಿ ಕಥಾ ಹಂದರಕ್ಕೆ ಸಜ್ಜುಗೊಳಿಸುತ್ತದೆ. ೨) ಕತೆ ಹುಟ್ಟುವ ಕ್ಷಣ ಯಾವುದು? ಯಾವುದಾರೂ ಪುಸ್ತಕ ಓದುವಾಗ, ಹಿರಿಯರ ಜೊತೆ ಮಾತನಾಡುವಾಗ, ಸಮಾನ ಮನಸ್ಕರೊಂದಿಗೆ ಹರಟೆಗೆ ಇಳಿದಾಗ, ಪ್ರಕೃತಿಯ ವಿಕೃತಿಯನ್ನು ಗಮನಿಸಿದ ಕ್ಷಣಗಳಲ್ಲಿ ನನ್ನ ಕತೆಗಳು ಹುಟ್ಟಿಕೊಳ್ಳುತ್ತವೆ. ಯಾವುದಾದರು ಘಟನೆಗಳು ನನ್ನ ಭಾವನೆಗಳನ್ನ ತಟ್ಟಿದಾಗಲೂ ಭಾವನಾತ್ಮಕ ಕಥೆಗಳು ಹುಟ್ಟುತ್ತವೆ. ನಮ್ಮ ಸುತ್ತಣ ಪರಿಸರದಲ್ಲಿ ಒಂದಿಷ್ಟು ಜೀವ ಜಂತುಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಅಲ್ಲೊಂದು ಸುಂದರ ಕಥೆ ಮೂರ್ತಗೊಳ್ಳುತ್ತದೆ. ೩) ನಿಮ್ಮ ಕತೆಗಳ ವಸ್ತು ವ್ಯಾಪ್ತಿ ಹೆಚ್ಚಾಗಿ ಯಾವುದು? ಪದೇ ಪದೇ ಕಾಡುವ ವಿಷಯ ಯಾವುದು? ನನ್ನ ಜೀವನಾನುಭವದಿಂದ ಮೊಗೆದ ಘಟನೆಗಳು ಮತ್ತು ಅನುಭವಿಸುತ್ತಿರುವ ಪರಿಸರಗಳೇ ನನ್ನ ಕತೆಗಳ ವ್ಯಾಪ್ತಿ. ಬಾಲ್ಯದಲ್ಲಿ ನಾನು ಕಂಡ ಬಡತನ, ಮನೆತನ, ಗಳೆತನಗಳ ಮೆಲಕು, ಕಥೆಗಳಿಗೆ ಪುಷ್ಠಿ ಕೊಡುತ್ತವೆ. ಬರೆಯಬಹುದಾಗಿದ್ದರೂ, ನಾನು ಈ ಮೊದಲೇಕೆ ಸುಮ್ಮನೆ ಕುಳಿತುಬಿಟ್ಟೆ ಎಂಬುದು ನನ್ನನ್ನು ಪದೇ ಪದೇ ಕಾಡುತ್ತದೆ. ೪) ಕತೆಯಲ್ಲಿ ಬಾಲ್ಯ, ಹರೆಯ ಇಣುಕಿದೆಯಾ? ಹೌದು, ನನ್ನ ಕತೆಯ ಹರಿಹದಲ್ಲಿ ಎಲ್ಲಾ ಅವಸ್ಥೆಗಳೂ ಇವೆ. ಅವೇ ಕಥಾ ಪ್ರಸಂಗದ ಮೂಲ ವಸ್ತು. ೫) ಪ್ರಸ್ತುತ ರಾಜಕೀಯ ಸನ್ನಿವೇಷದ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು? ಇಂದಿನ ರಾಜಕೀಯ ಎನ್ನುವುದೊಂದು ಡೊಂಬರಾಟ. ಸಾಹಿತ್ಯ ಮತ್ತು ರಾಜಕೀಯ ಪರಸ್ಪರ ವಿರೋಧಾಭಾಸದ ಪದಗಳು. ಸಾಹಿತಿಯಾದವನು ರಾಜಕೀಯ ಪಲ್ಲಟಗಳಿಗೆ ತಲೆ ಹಾಕಬಾರದು. ಆದರೆ ರಾಜಕೀಯ ಸ್ಥಿತ್ಯಂತರಗಳು ಸಾಹಿತಿಯ ಬರಹಕ್ಕೆ ಗ್ರಾಸವಾಗಬಹುದು. ರಾಜಕೀಯ ವಿಡಂಬನೆಗಳಿಂದ ಸಾಹಿತಿಯೊಬ್ಬ ಪ್ರಜೆಗಳ ಕಣ್ಣು ತೆರೆಸಬಲ್ಲ. ೬) ಧರ್ಮ, ದೇವರು ವಿಷಯದಲ್ಲಿ ನಿಮ್ಮ ನಿಲುವೇನು? ಪ್ರತಿ ಮನುಷ್ಯನಿಗೂ ಒಂದು ಧರ್ಮಬೇಕು. ಅದು ಅವನ ಅಸ್ಮಿತೆಯ ಅಷ್ಟಬಂಧ. ಆ ಧರ್ಮವನ್ನು ಗೌರವಿಸಿ ಪಾಲಿಸಿದರೆ, ಅದೇ ಧರ್ಮ ಅವನನ್ನು ರಕ್ಷಿಸುತ್ತದೆ. ದೇವರು ಎನ್ನುವುದೊಂದು ನಿರಾಕಾರ, ಆಗೋಚರ ಶಕ್ತಿ. ಅದು ಇಡೀ ವಿಶ್ವವನ್ನ ನಿಯಂತ್ರಿಸುವ ಮಹಾಕಾಯ. ಅದನ್ನೇ ಮನುಷ್ಯ, ವಿವಿಧ ಬಣ್ಣ, ಆಕಾರ, ಹೆಸರು ಕೊಟ್ಟು ಭಾವನೆಯಿಂದ ಪೂಜಿಸುತ್ತಾನೆ. ದೇವರ ಮೇಲನ ಭಯ, ಭಕ್ತಿಯಿಂದಲೇ ಮನುಷ್ಯ ಇಂದು ಇನ್ನೂ ಪೂರ್ಣ ಹದ ತಪ್ಪಿಲ್ಲ. ೭) ಪ್ರಸ್ತುತ ಸಾಂಸ್ಕೃತಿಕ ವಾತಾವರಣ ಬಗ್ಗೆ ನಿಮಗೆ ಏನೆನ್ನಿಸುತ್ತದೆ? ನನಗನ್ನಿಸಿದಂತೆ ಸಂಸ್ಕೃತಿ ಕಲುಷಿತಗೊಂಡಿದೆ. ವಿತಂಡವಾದ, ಅವಹೇಳನ, ‘ಇಸಂ’ಗಳಿಗೆ ಮನುಷ್ಯ ಕಟ್ಟು ಬಿದ್ದಿದ್ದಾನೆ. ಇವುಗಳಿಂದ ಹೊರಬಂದು, ನಮ್ಮ ಪರಂಪರೆಯನ್ನು ಅರ್ಥಮಾಡಿಕೊಂಡರೆ ನಮ್ಮ ಅದೇ ಸುಸಂಸ್ಕೃತಿ ಉಳಿದುಕೊಳ್ಳುತ್ತದೆ. ೮) ಸಾಹಿತ್ಯ ವಲಯದ ರಾಜಕಾರಣದ ಬಗ್ಗೆ ನೀವು ಹೇಗೆ ಪ್ರತಿಕ್ರಯಿಸುವಿರಿ? ಇದೊಂದು ದೊಡ್ಡ ‘ಲಾಬಿ’ ಎಂದೇ ಹೇಳಬೇಕು. ಎಡ, ಬಲ, ಜಾತಿ, ಕುಲ, ಪರಿವಾರ ಎನ್ನುತ್ತ, ಬಿರುದು ಬಾವಲಿ, ಪ್ರಶಸ್ತಿಗಳ ಬೆನ್ನುಹತ್ತಿ ರಾಜಕಾರಣ ಮಾಡಿ ಅಲ್ಲೊಂದು ಮೌಲಿಕ ಅದಃ ಪತನವಾಗುತ್ತಿದೆ. ಇದೊಂದು ದುರಂತ. ಈ ಸ್ಥಿತಿಯಲ್ಲಿ ಯಾವುದೇ ಬಲವಿಲ್ಲದ ಶಾಸ್ತ್ರೀಯ ಸಾಹಿತಿಗಳು ಎಲೆ ಮರೆಯ ಕಾಯಿಗಳಾಗೇ ಉಳಿದು ನೇಪಥ್ಯಕ್ಕೆ ಸರಿಯುತ್ತಾರೆ. ರಾಜಕಾರಣ ಸಾಹಿತ್ಯದಲ್ಲಿ ನುಸುಳದಿದ್ದರೆ, ಸಾಹಿತ್ಯಕ್ಕೆ ‘ಕಸು’ ಬರುತ್ತದೆ. ೯) ಈ ದೇಶದ ಚಲನೆಯ ಬಗ್ಗೆ ನಿಮ್ಮ ಮನಸು ಏನು ಹೇಳುತ್ತದೆ? ಈ ದೇಶವನ್ನು ಆಳಲು ಉದಾತ್ತ ಮನಸ್ಸಿನ ಒಂದೇ ಪಕ್ಷವಿರಬೇಕು. ನಾಯಕನ ನಿರ್ಣಯಕ್ಕೆ ಎಲ್ಲರ ಸಹಮತವಿರಬೇಕು. ದೇಶಕ್ಕೆ ಭವ್ಯ ಪರಂಪರೆ ಇದೆ. ಸುಭಿಕ್ಷವಾದ ರಾಮರಾಜ್ಯ ಕಂಡ ಖಂಡ ಇದು, ಬುದ್ದ, ಬಸವ, ಗಾಂಧಿ, ಅಶೋಕರ ನಾಡಿದು. ಇತಿಹಾಸ ಮರುಕಳಿಸಿ ನಮ್ಮ ದೇಶ ವೈಭವದಿಂದ ಮೆರೆಯುವದು ಮತ್ತೆ. ೧೦) ಸಾಹಿತ್ಯದ ಬಗ್ಗೆ ನಿಮ್ಮ ಕನಸೇನು? ಸಾಹಿತ್ಯದ ಕ್ಷೇತ್ರ ಸಾಗರದಂತೆ ವಿಶಾಲವಾಗಿದೆ. ಮೊಗೆದಷ್ಟೂ ಮತ್ತೆ ಸೊರೆಯುವ ಗಂಗೆ ಅದು. ಶತಮಾನಗಳಿಂದ ಅಭಿವೃದ್ಧಿಗೊಳಿಸಿಟ್ಟ ಸಾಹಿತ್ಯ ಪರಂಪರೆಯನ್ನು ಮುಕ್ಕಾಗದಂತೆ ಕಾಪಿಟ್ಟು, ಗಟ್ಟಿತನ ಕಳೆದು ಹೋಗದಂತೆ ಕಾಯಬೇಕು. ಸಾಹಿತ್ಯದಲ್ಲಿ ಮುಕ್ತ ಮನಸ್ಸು ಮತ್ತು ವಿಶಾಲ ಭಾವನೆ ಇರಬೇಕು. ಅದೇ ನನ್ನ ಕನಸು. ೧೧) ಕನ್ನಡ ಹಾಗೂ ಆಂಗ್ಲ ಭಾಷೆಯ ಸಾಹಿತ್ಯದಲ್ಲಿ ನಿಮ್ಮ ಇಷ್ಟದ ಹಾಗೂ ಕಾಡಿದ ಕವಿ, ಸಾಹಿತಿ ಯಾರು? ಕನ್ನಡದಲ್ಲಿ ಇಷ್ಟವಾದ ಸಾಹಿತಿ ಯಶವಂತ ಚಿತ್ತಾಲರು. ಇಷ್ಟವಾದ ಕವಿ- ಕೆ.ಎಸ್. ನರಸಿಂಹಸ್ವಾಮಿ. ಕೆ.ಎಸ್.ನ.ರ. ಮೈಸೂರ ಮಲ್ಲಿಗೆಯ ಘಮ ನನ್ನನ್ನು ಪದೇ ಪದೇ ಆವರಿಸಿಕೊಂಡು ಕಾಡುತ್ತದೆ. ಆಂಗ್ಲ ಸಾಹಿತ್ಯದಲ್ಲಿ ಇಷ್ಟವಾದ ಸಾಹಿತಿ – ಪೌಲೋ ಕೋಹಿಲೋ ಇಷ್ಟವಾದ ಕವಿ- ಜಾನ್ ಮಿಲ್ಟನ್, ಹದಿನೇಳನೇ ಶತಮಾನದ ಇಂಗ್ಲಿಷ್ ಕವಿಯ ಕ್ಲಿಷ್ಟ ಮಹಾಕಾವ್ಯ ‘ಪ್ಯಾರಾಡೈಸ್ ಲಾಸ್ಟ’ ಓದಿದಷ್ಟು ಹೊಸ ತತ್ವಕ್ಕೆ ಒಯ್ದು ಕಾಡುತ್ತದೆ. ಅದೊಂದು ವಿಭಿನ್ನ ಓದು. ೧೨) ಈಚೆಗೆ ಓದಿದ ಕೃತಿಗಳಾವವು? ಕಶೀರಾ- ಸಹನಾ ವಿಜಯಕುಮಾರ ೧೩) ನಿಮಗೆ ಇಷ್ಟವಾದ ಕೆಲಸವಾವುದು? ಓದು, ಬರಹ, ಹರಟೆ, ರುಚಿ ರುಚಿ ಅಡಿಗೆ ಮಾಡಿ ತಿನ್ನುವುದು, ತಿನಿಸುವುದು. ಹೂದೋಟ ಪಾಲನೆ. ೧೪) ನಿಮಗೆ ಇಷ್ಟವಾದ ಸ್ಥಳ ಯಾವುದು? ಮುಂಬಯಿ- ಅದೊಂದು ಬದುಕಲು ಕಲಿಸುವ ಪ್ರಕೃತಿ ಶಾಲೆ. ೧೫) ನಿಮ್ಮ ಪ್ರೀತಿಯ ತುಂಬಾ ಇಷ್ಟದ ಸಿನಿಮಾ ಯಾವುದು? ನಾನು ಇಷ್ಟ ಪಟ್ಟಿದ್ದು ಹಳೆಯ ಹಿಂದಿ ಚಿತ್ರ ‘ಸದ್ಮಾ’ – ಶ್ರೀದೇವಿ, ಕಮಲಹಾಸನ ೧೬) ನೀವು ಮರೆಯಲಾರದ ಘಟನೆ ಯಾವುದು ? ವಯಸ್ಸಾದ ಅಪ್ಪ, ನಮ್ಮಿಬ್ಬರನ್ನು ಆಟೋದಲ್ಲಿ ಕೂಡ್ರಿಸಿ, ತಾನು ಮಳೆಯಲ್ಲಿ ನಮ್ಮ ಹಿಂದಿನಿಂದ ಸೈಕಲ್ಲಿನಲ್ಲಿ ಟಾಕೀಸಿಗೆ ಬಂದಿದ್ದು. ೧೭) ಏನಾದರೂ ಹೇಳುವುದಿದೆಯಾ? ಹೌದು ನಾನು ಕಂಡ ಸತ್ಯದ ಮಾತು- ಜೀವನೋತ್ಸಾಹಕ್ಕೆ ವಯದ ಹಂಗಿಲ್ಲ. ನಾನು ಒಂದಿಷ್ಟು ಓದು ಬರಹದ ಜೊತೆಗೆ ಬೆಳೆಸಿಕೊಂಡ ಹವ್ಯಾಸ ಹೂದೋಟ ಪಾಲನೆ. ನನ್ನ ತಾರಸಿ ತೋಟ ಹಸಿರಿನಿಂದ ಕಂಗೊಳಿಸಿದೆ. ಹೂ ಸಸ್ಯಗಳ ಜೊತೆ ಫಲ ಬಿಡುವ ಗಿಡಗಳೂ ಇವೆ. ಲಿಂಬು, ಮಾವು, ದಾಳಿಂಬೆ, ಅಂಜೂರ ಇತ್ಯಾದಿ. ನಿತ್ಯವೂ ಕೆಲಹೊತ್ತು ನೀರು ಗೊಬ್ಬರ ಉಣಿಸುವ ನಡುವೆ ಸಸ್ಯ ಗಳ ಜೊತೆ ನನ್ನ ಮೌನ ಸಂವಾದ ನಡೆದಿರುತ್ತದೆ. ಸಸ್ಯಗಳು ಬಿಡುವ ಮೊಗ್ಗು, ಹೂ, ಹೀಚು, ಕಾಯಿ, ಹಣ್ಣಿನ ಪ್ರತಿ ಅವಸ್ಥೆಯಲ್ಲೂ ನನ್ನ ಖುಷಿಯ ಸಂವೇದನೆಗೆ ಅವು ಸ್ಪಂದಿಸುತ್ತವೆ. ಈ ಮುದುಕ ಸೇವೆ ಮಾಡುತ್ತಿದ್ದಾನೆಂಬ ಅನುಕಂಪಕ್ಕೆ ಇರಬೇಕು, ನನ್ನ ಮಾವಿನ ಗಿಡ ವರ್ಷಕ್ಕೆ ಎರಡು ಬಾರಿ ಕಾಯಿ ಬಿಡುತ್ತದೆ. ಹುಬ್ಬಳ್ಳಿಯ ತಮಿಳು ನರ್ಸರಿಯವನೇನೋ “ಇದು ಒಳ್ಳೆಯ ಜಾತಿ ಮಾವು” ಎಂದೇ ಕಸಿ ಗಿಡ ಕೊಟ್ಟಿದ್ದ. ಆದರೆ ನನ್ನ ದುರಾದೃಷ್ಟಕ್ಕೆ ಅದು ಬಿಡುತ್ತಿರುವುದು ಹುಳಿಮಾವು. ಹುಟ್ಟಿದ ಮಗ ಕಪ್ಪೆಂದು ಎಂದಾದರೂ ಎಸೆದು ಬಿಡುತ್ತಾರೆಯೇ? ಜೀರಿಗೆ ವಾಸನೆ ಮಾವಿನಕಾಯಿಯ ಉಪ್ಪಿನಕಾಯಿ ತುಂಬಾ ಸ್ವಾಧಿಷ್ಟ.! ಹೀಗಾಗಿ ಆ ಗಿಡ ನನಗಿಷ್ಟ. *********************************************************** ನಾಗರಾಜ ಹರಪನಹಳ್ಳಿ ಹರಪನಹಳ್ಳಿ ಹುಟ್ಟೂರು. ಹರಪನಹಳ್ಳಿ ತಾಲೂಕಿನ ಮೈದೂರು-ಚಿಗಟೇರಿ ಬೆಳೆದ ಊರು. ಪಿಯು ಓದಿದ್ದು ಕೊಟ್ಟೂರಿನಲ್ಲಿ. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿ.ಎ., ಕವಿವಿಯಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ. ದಾವಣಗೆರೆ, ಸದಾಶಿವಗಡ ಮತ್ತು ಭಟ್ಕಳದಲ್ಲಿ ಕನ್ನಡ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿ, 1997 ರಿಂದ ಕಾರವಾರದಲ್ಲಿ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಜನವಾಹಿನಿ, ಜನಾಂತರಂಗ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಇವರು, ಈ ಟಿವಿ ಕನ್ನಡ ನ್ಯೂಸ್ ಚಾನೆಲ್ಲಿಗೆ ವರದಿಗಾರಿಕೆ ಬಳಿಕ ಈಗ ಉದಯವಾಣಿ , ಬೆಳಗಾವಿಯ ಲೋಕದರ್ಶನ ಪತ್ರಿಕೆಗೆ ವರದಿಗಾರರಾಗಿದ್ದಾರೆ. 2009ರಲ್ಲಿ ‘ಕಡಲದಂಡೆಗೆ ಬಂದ ಬಯಲು’ ಎಂಬ ಕಥಾ ಸಂಕಲನ, 2013ರಲ್ಲಿ ‘ಬಿಸಿಲ ಬಯಲ ಕಡಲು’ ಎಂಬ ಕವಿತಾ ಸಂಕಲನ ಪ್ರಕಟಣೆ.2019 ರಲ್ಲಿ ‘ವಿರಹಿದಂಡೆ’ ಕವಿತಾ ಸಂಕಲನ ಪ್ರಕಟಿಸಿದ್ದಾರೆ. ಕಾರವಾರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ
ಮಕ್ಕಳ ಕಥೆ ಪ್ರತಿಫಲ ಬಸವರಾಜ ಕಾಸೆ ದಿನವೂ ಏನಾದರೂ ಒಂದು ಒಳ್ಳೆಯ ಕೆಲಸ ಮಾಡಿ ಅದನ್ನು ಬರೆದುಕೊಂಡು ಬರಬೇಕು ಎಂದು ಕ್ಲಾಸ್ ಟೀಚರ್ ಹೇಳುತ್ತಿದ್ದರು. ಆದರೆ ಅವಕಾಶ ಇದ್ದಾಗಲೂ ಅಂತಹ ಕೆಲಸವನ್ನು ಯಾವ ಮಕ್ಕಳು ಮಾಡುತ್ತಿರಲಿಲ್ಲ. ಅದರಲ್ಲಿ ವಿಶೇಷವಾಗಿ ಚೂಟಿ ಮಾಡುತ್ತಾನೆ ಇರಲಿಲ್ಲ. ಆದರೆ ದಿನವೂ “ಇಂದು ರಸ್ತೆಯಲ್ಲಿ ಬಿದ್ದ ಮುಳ್ಳು ತೆಗೆದು ಹಾಕಿದೆ”, “ಕಲ್ಲು ತೆಗೆದು ಹಾಕಿದೆ”, “ವೃದ್ಧರಿಗೆ ರಸ್ತೆ ದಾಟಲು ಸಹಾಯ ಮಾಡಿದೆ”, “ಮನೆ ಕಸ ಗುಡಿಸಿದೆ”, “ಅಮ್ಮನಿಗೆ ಅಡುಗೆಯಲ್ಲಿ ನೆರವಾದೆ” ಹೀಗೆ ಸುಮ್ಮಸುಮ್ಮನೆ ಏನಾದರೂ ಬರೆದುಕೊಂಡು ಹೋಗುತ್ತಿದ್ದಳು. ಚೂಟಿಯ ಗೆಳತಿಯಾದ ಪುಟ್ಟಿಯು ನಿಜವಾಗಿಯೂ ಮಾಡುವ ಮನಸ್ಸು ಹೊಂದಿದ್ದಳು ಮತ್ತು ಗಮನಕ್ಕೆ ಬಂದರೆ ಮಾಡುತ್ತಿದ್ದಳು. ಆದರೆ ಇದನ್ನೆಲ್ಲಾ ಎಷ್ಟೋ ಸಲ ಚೂಟಿಯೇ ತಡೆದಿದ್ದಳು. ಅವತ್ತು ಒಂದು ದಿನ ಚೂಟಿ ಮತ್ತು ಪುಟ್ಟಿ ರಸ್ತೆಯಲ್ಲಿ ಹೋಗುತ್ತಿದ್ದಾಗ ಯಾರೋ ಮಾವಿನ ಹಣ್ಣು ತಿನ್ನುತಿರುವದನ್ನು ಕಂಡು ಇವರಿಬ್ಬರಿಗೂ ತಿನ್ನಬೇಕು ಎನಿಸಿತು. ಆದರೆ ಇಬ್ಬರ ಬಳಿಯೂ ದುಡ್ಡು ಇರಲಿಲ್ಲ. ಹಾಗೆ ಆಸೆಗಣ್ಣಿನಲ್ಲಿ ಮುಂದೆ ಮುಂದೆ ಬರುವಾಗ ಅಲ್ಲಿ ಒಬ್ಬಳು ಅಜ್ಜಿ ರಸ್ತೆ ದಾಟಲಾಗದೆ ತಲೆ ಮೇಲೆ ಬುಟ್ಟಿ ಹೊತ್ತು ನಿಂತಿದ್ದಳು. ಒಂದಾದ ಮೇಲೆ ಒಂದು ವಿಪರೀತ ವಾಹನಗಳ ಓಡಾಟ. “ಪಾಪ, ನೋಡೇ… ಆ ಅಜ್ಜಿಗೆ ಸಹಾಯ ಮಾಡೋಣ, ಬಾ ಆ ಕಡೆ ಹೋಗೋಣ” ಎಂದರೂ “ಹೋಗೇ, ಯಾರು ಬರತಾರೆ” ಎಂದಳು. ಆಗ ಪುಟ್ಟಿ ಒಬ್ಬಳೇ ಹೋಗಿ ಮೆಲ್ಲಗೆ ಅಜ್ಜಿಯ ಕೈ ಹಿಡಿದು ರಸ್ತೆ ದಾಟಿಸಿದಳು. “ಸ್ವಲ್ಪ ಬುಟ್ಟಿ ಇಳಿಸು ಮರಿ ಹಾಗೆ” ಎಂದಾಗ ಅಜ್ಜಿ, ಪುಟ್ಟಿ ಇಳಿಸಿದಳು. ನೋಡಿದರೆ ಆ ಬುಟ್ಟಿ ತುಂಬಾ ಮಾವಿನ ಹಣ್ಣು “ತಗೋ, ತಿನ್ನು” ಅಂತ ಅಜ್ಜಿ ಕೊಟ್ಟರೂ “ಬೇಡ ಬೇಡ” ಎಂದು ಆಮೇಲೆ ತೆಗೆದುಕೊಂಡಳು. ದೂರದಲ್ಲಿಯೇ ನಿಂತು ನೋಡತಾ ಚೂಟಿ ಹೊಟ್ಟೆಕಿಚ್ಚು ಪಟ್ಟುಕೊಂಡು ಮುಖ ಉದಿಸಿಕೊಂಡಳು. “ಅಜ್ಜಿ ಅವಳು ನನ್ನ ಪ್ರೇಂಡ್” ಎಂದಾಗ ಅವಳನ್ನು “ಬಾ ಇಲ್ಲಿ, ಮಾವಿನ ಹಣ್ಣು ತಗೋ” ಎಂದಾಗ ಆಸೆಗಣ್ಣಿನಿಂದ ಓಡಿ ಬರಲು ಕಾಲಿಗೆ ಮುಳ್ಳು ಚುಚ್ಚಿತು. “ಯಾರಾದರೂ ಸೈಡಿಗೆ ಈ ಮುಳ್ಳು ಹಾಕಿದರೆ ನನ್ನ ಕಾಲಿಗೆ ಹೀಗೆ ಆಗ್ತಾ ಇರಲಿಲ್ಲ” ಎಂದು ಬೈಯಿಕೊಂಡಳು. ಹಾಗೆ ಕುಂಟುತ್ತಾ ಬಂದ ಅವಳಿಗೂ ಅಜ್ಜಿ ಮಾವಿನ ಹಣ್ಣು ನೀಡಿದಳು. ಅದರಿಂದ ಸಂತುಷ್ಟಳಾದ ಚೂಟಿ “ನಾವು ಇನ್ನೊಬ್ಬರಿಗೆ ಸಹಾಯ ಮಾಡಿದರೆ ನಮಗೂ ಮತ್ತೆ ಯಾರೋ ಸಹಾಯ ಮಾಡುತ್ತಾರೆ, ಒಳ್ಳೆಯ ಕೆಲಸಕ್ಕೆ ಒಳ್ಳೆಯ ಪ್ರತಿಫಲ” ಎಂದು ಖುಷಿಗೊಂಡು ತನ್ನ ನಡವಳಿಕೆಯನ್ನು ಬದಲಿಸಿಕೊಳ್ಳಬೇಕು ಎಂದು ನಿರ್ಧರಿಸಿ ಮಾವಿನ ಹಣ್ಣು ತಿಂದಳು ***********************************************
ಅಂಕಣ ಬರಹ ಕಬ್ಬಿಗರ ಅಬ್ಬಿ ಕಾವ್ಯೋದ್ಭವ “ಗುರುಗಳೇ, ನನಗೆ ಸಂಗೀತ ಕಲಿಯಬೇಕು! ಕಲಿಸುವಿರಾ..” ಅಲ್ಲಲ್ಲಿ ಹರಿದರೂ ತಕ್ಕಮಟ್ಟಿಗೆ ಒಪ್ಪವಾಗಿದ್ದ ಅಂಗಿ, ಖಾಕಿ ಚಡ್ಡಿ ಧರಿಸಿದ ಹುಡುಗ, ‘ಧ್ರುಪದ್ ಗಂಧರ್ವ’ ಮನೆ ತಲಪಿದ್ದ. ಮನೆಯ ಬಂಧನ ಬಿಟ್ಟು, ಎರಡು ದಿನ, ಮೂರು ರಾತ್ರೆ ರೈಲು ಯಾತ್ರೆ ಮಾಡಿದಾಗ, ಹೊತ್ತು ತಂದದ್ದು ಕಪ್ಪು ಕಣ್ಣುಗಳ ತುಂಬಿದ ಕನಸು ಮಾತ್ರ. ಕಣ್ಣಲ್ಲಿ ಕಣ್ಣಿಟ್ಟು ಒಳಗಿನ ಭಾಷೆಯನ್ನು ಅರ್ಥ ಮಾಡಿಕೊಂಡವರಂತೆ ಗುರುಗಳು ಒಪ್ಪಿಕೊಂಡರು. ಗುರುಗಳ ಮನೆಯಲ್ಲಿಯೇ ವಾಸ. ಬೆಳಗ್ಗೆ ಗಡಿಯಾರದ ಲೋಲಕ ಢಣ್ ಢಣ್ ಎಂದು ನಾಲ್ಕು ಬಾರಿ ಆಂದೋಳಿಸಿದಾಗ ಎದ್ದು ಮನೆ,ಅಂಗಳ ಗುಡಿಸಬೇಕು. ಆ ಮೇಲೆ ಬಾವಿಯೊಳಗೆ ಬಿಂದಿಗೆಯಿಳಿಸಿ ಒಂದೊಂದೇ ಬಿಂದಿಗೆ ನೀರನ್ನು ತಂದು ಮನೆಯ, ಬಚ್ಚಲು ಮನೆಯ,ಅಡುಗೆ ಮನೆಯ ಹಂಡೆ ತುಂಬುವ ಕೆಲಸ. ಗುರುಗಳ ಅಂಗಳದಲ್ಲಿ ತಂಬೂರಿ ಕೂಡಾ ೫ ಗಂಟೆಗೇ ಎದ್ದು ಸ್ವರ ಹಚ್ಚಲು ತಂತಿ ಬಿಗಿ ಮಾಡುತ್ತಿತ್ತು. ತಂಬೂರಿಯ ಮಂದ್ರ ಶಡ್ಜಕ್ಕೆ ಗುರುಗಳು ಸ್ವರ ಹಚ್ಚುವಾಗ, ಉಳಿದ ಶಿಷ್ಯರು ತಮ್ ತಮ್ಮ ಕೊರಳನ್ನೂ ಸೇರಿಸಿದಾಗ ಅನುರಣನೆಗೆ, ಬೆಳಗಿನ ಮಂಜು ಕರಗುತ್ತಿತ್ತು. ಪೂರ್ವದಿಗಂತ ವರ್ಣಮಯವಾಗುತ್ತಿತ್ತು. ಗುರುಗಳ ಮನೆಗೆ ತಲಪಿದ್ದು ಅಮವಾಸ್ಯೆಯ ದಿನ. ಇಂದು ಆಗಲೇ ಹುಣ್ಣಿಮೆ. ರಾತ್ರೆ ಗುರುಗಳ ಪಾದ ಒತ್ತುತ್ತಾ ಹುಡುಗ ಅನ್ನುತ್ತಾನೆ. ” ಗುರುಗಳೇ, ನನಗೆ ಸಂಗೀತ ಪಾಠ ದಯವಿಟ್ಟು ಶುರುಮಾಡಿ” ” ಬೇಟೇ! ನಿನ್ನ ಸಂಗೀತ ಪಾಠ ಆಗಲೇ ಆರಂಭವಾಗಿದೆ. ರಾತ್ರೆಯ ಮೌನದಲ್ಲಿಯೂ ಪ್ರಕೃತಿಯ ಸಂಗೀತ ಆಲಿಸು. ಗಡಿಯಾರದ ಲೋಲಕದ ಆಂದೋಲನದಲ್ಲಿ ಇಂಪಿನಲೆ ಇಲ್ಲವೇ?. ಬಾವಿಯೊಳಗೆ ಬಿಂದಿಗೆ ನೀರನ್ನು ಸ್ಪರ್ಶಿಸಿದಾಗ ಆದ ಕಂಪನ ಬಾವಿಯೊಳಗಿಂದ ಮೊಳಗುವಾಗ ಅದರಲ್ಲಿ ಸಂಗೀತ ಆಲಿಸಿರುವೆಯಾ?. ಇಬ್ಬನಿಯ ಒಂದೊಂದೇ ಬಿಂದುಗಳು ತೊಟ್ಟಿಕ್ಕುವಾಗ ಅದರೊಳಗಿಂದ ಸ್ಪಂದಿಸುವ ಸ್ವರ ಸಾಮರಸ್ಯ ನೋಡಿರುವೆಯಾ?. ಇಂದು ಹುಣ್ಣಿಮೆಯ ರಾತ್ರಿ. ಕಿಟಿಕಿಯ ಹೊರಗೆ ನೋಡು. ಚಂದ್ರನ ಬೆಳಕಿನ ಉತ್ಕರ್ಷದಲ್ಲಿ ಪ್ರಕೃತಿಯ ಜೀವತಂತುಗಳು ಮಿಡಿಯುವ ಸಂಗೀತ ಕೇಳಿಸುತ್ತಿದೆಯಾ?. ಮಗೂ, ನಿನಗದು ಕೇಳಿಸಲು ನಿನ್ನ ಮನಸ್ಸೊಳಗೆ ಮೌನವನ್ನು ತುಂಬಿಸಬೇಕು. ಅಲೆಗಳು ಮೌನದ ನೆಲೆಯಲ್ಲಿ ಯೋಗ ಸಮಾಧಿ ಹೊಂದಬೇಕು.ಬೇಟಾ, ಅಂತಹ ಒಂದು ಶಾಂತಿಯ ಪ್ರಜ್ಞೆಯನ್ನು ಕ್ಷಣ ಕ್ಷಣವೂ ಅನುಭವಿಸುತ್ತಾ ಪ್ರಕೃತಿಯನ್ನು ಗಮನಿಸು. ಆಗ ಜೀವಕ್ರಿಯೆಯ ಪ್ರತೀ ಕ್ಷಣಗಳಲ್ಲಿ ಜೀವಲಯ, ಜೀವಸ್ವರ, ಭಾವತರಂಗ ನಿನಗೆ ಕೇಳಿಸುತ್ತೆ. ಆ ಸ್ವರ ಲಯ,ಭಾವದಲ್ಲಿ ಒಂದಾಗುವ, ತಾದಾತ್ಮ್ಯ ಅನುಭವಿಸುವ ಮನಸ್ಸು ನಿನಗೆ ಸಂಭವಿಸಲಿ. ಸಂಗೀತದ ಜೀವಾತ್ಮ ನಿನ್ನೊಳಗೆಯೇ ಸಾಕ್ಷಾತ್ಕಾರ ಆಗಲು ಇದೊಂದೇ ಮಾರ್ಗ. ಪ್ರಕೃತಿಯೇ ನಿನ್ನ ಸಂಗೀತದ ಮೊದಲ ಗುರು, ಮಗೂ.” ಕ್ಷಮಿಸಿ! ಮೇಲಿನ ಕಥೆಯಂತಹಾ ಕಥೆ ಕಳೆದ ಶತಮಾನದಲ್ಲಿ ಸಂಗೀತ ಕಲಿತ ಹಲವು ಮಹಾನ್ ಸಂಗೀತ ಕಲಾಕಾರರ ಬಾಲ್ಯದ ಕಲಿಕೆಯ, ಕಷ್ಟದ, ಸಮರ್ಪಣೆಯ ಕಥೆಯೇ. ಪ್ರಪಂಚದ ಪ್ರತಿಯೊಂದು ಸ್ಥಿತಿಯಲ್ಲೂ ಸಿಮ್ಮಟ್ರಿ, ಸೌಂದರ್ಯ ಇರುವ ಹಾಗೆಯೇ, ಪ್ರತೀ ಕ್ರಿಯೆಯಲ್ಲಿ, ಲಯವಿದೆ, ತರಂಗವಿದೆ, ಆವರ್ತನವಿದೆ ಮತ್ತು ಸಂಗೀತವೂ ಇದೆ. ಕಾವ್ಯದ ಉಗಮದಲ್ಲಿಯೂ,ಈ ಭಾವಲಯ, ಭಾವತರಂಗ, ಮತ್ತು ತುರೀಯಾವಸ್ತೆ ಅಂತರ್ಗತವಾಗಿದೆ. ಸಂಗೀತವಿರಲಿ ಕಾವ್ಯವಿರಲಿ, ಮೂಡುವ ಕ್ಯಾನುವಾಸು ಮನಸ್ಸೇ ತಾನೇ. ಹೆಣ್ಣುಗಂಡಿನ ಮಿಲನದಿಂದ ಎರಡು ಜೀವಕೋಶಗಳು ಒಂದಾಗಿ, ಆ ಕೋಶ, ಸ್ವವಿಭಜನೆಯಿಂದ, ಎರಡಾಗಿ, ಮತ್ತೆ ನಾಲ್ಕಾಗಿ, ಹಲವು ಲಕ್ಷ ಪುನರಾವರ್ತನೆಗಳ ನಂತರ 27 ಟ್ರಿಲಿಯನ್ ( 27 ಲಕ್ಷ ಕೋಟಿ ) ಜೀವಕೋಶಗಳ ದೇಹರೂಪೀ ಮಗುವಾಗುವುದು ಸೃಷ್ಟಿಯ ವಿಸ್ಮಯ. ಅದಕ್ಕಿಂತ ದೊಡ್ಡ ವಿಸ್ಮಯ, ಮನುಷ್ಯ ದೇಹದ, ಹೃದಯ, ಶ್ವಾಸಕೋಶ,, ಉದರ, ಕೈಕಾಲುಗಳು, ಮಿದುಳು, ಅಸಂಖ್ಯ ರಕ್ತನಾಳಗಳು ಹೇಗಿರಬೇಕು, ಎಲ್ಲಿರಬೇಕು, ಹೇಗೆ ಕೆಲಸ ಮಾಡಬೇಕು, ಇಷ್ಟೊಂದು ಎಂಜಿನಿಯರಿಂಗ್ ವ್ಯವಸ್ಥೆಗಳು ಹೇಗೆ ಟೀಮ್ ವರ್ಕ್ ಮಾಡ ಬೇಕು ಎಂಬ ಎಲ್ಲಾ ಜ್ಞಾನವೂ ಆ ಒಂದು ಕೋಶದೊಳಗಿಂದಲೇ ವಿಕಸಿತವಾಯಿತು ಎಂಬುದು. ಮಿದುಳಿನೊಳಗಿನ ಸಾಫ್ಟ್ವೇರ್ ಕೂಡಾ ಆ ಒಂದು ಕೋಶದೊಳಗಿಂದಲೇ ಇವಾಲ್ವ್ ಆಗಿ ಮಿದುಳಿನೊಳಗೆ ಇನ್ಸ್ಟಾಲ್ ಆಗಿದೆ. ಹುಟ್ಟಿದ ಮಗುವಿನ ಹಲವು ಪ್ರತಿಭೆಗಳೂ, ಆ ಕೋಶದಲ್ಲಿ ಬೀಜವಾಕ್ಯವಾಗಿದ್ದವು. ಹೀಗೆ ಎಲ್ಲವನ್ನೂ ತನ್ನ ಕೇಂದ್ರದಿಂದ ಸೃಜಿಸಿ, ಸೃಷ್ಟಿಯಾಗುವ ಕ್ರಿಯೆ, ಅಂತರಂಗದಿಂದ ಚಿಲುಮಿಸಿ ಹೊರಬರುವ ಕ್ರಿಯೆ, ಕಾವ್ಯೋದ್ಭವದ ಹಲವು ಸಾಧ್ಯತೆಗಳಲ್ಲಿ ಮೊದಲನೆಯದೂ ಹೌದು, ಮತ್ತು ಅತ್ಯಂತ ಸಂಕೀರ್ಣವೂ ಹೌದು. ಆದರೆ ಇಂತಹ ಪ್ರಯತ್ನದಿಂದ ಮೊಳೆತ ಕವಿತೆ, ಅನನ್ಯವೂ ಆತ್ಮಾರ್ಥಪೂರ್ಣವೂ ಆಗಿರುತ್ತೆ. ಇಂತಹ ಕವಿತೆಗಳನ್ನು ಸೃಜಿಸುವ ಕವಿ ರಸ ಋಷಿಗಳೇ ಆಗಿರುತ್ತಾರೆ. ಕುವೆಂಪು ಅವರ “ಓ ನನ್ನ ಚೇತನ, ಆಗು ನೀ ಅನಿಕೇತನ” ಇಂತಹ ಒಂದು ಸೃಷ್ಟಿ. ದ.ರಾ. ಬೇಂದ್ರೆಯವರ ‘ ನಾಕುತಂತಿ’ , ‘ಚೈತನ್ಯದ ಪೂಜೆ’ ಕವಿತೆಗಳೂ ಅಷ್ಟೇ. ” ಚೈತನ್ಯದ ಪೂಜೆ ನಡೆದSದ ನೋಡS ತಂಗಿ।। ಅಭಂಗದ ಭಂಗೀS ಸತ್ಯ ಎಂಬುವ ನಿತ್ಯದ ದೀಪ ಸುತ್ತೆಲ್ಲಾ ಅವನದೇ ರೂಪ ಪ್ರೀತಿ ಎಂಬುವ ನೈವೇದ್ಯ ಇದು ಎಲ್ಲರ ಹೃದಯದ ಸಂವೇದ್ಯ. ಸೌಂದರ್ಯ ಧ್ಯಾನಾ ಎದೆಯಲ್ಲಿ ಅಸ್ಪರ್ಶಾ ಚಿನ್ಮಯದಲ್ಲಿ ಆನಂದಗೀತ ಸಾಮSವೇದಾ ಸರಿಗಮ ನಾದಾ” ಇಂತಹ ಕವಿತೆಯನ್ನು ಬರೆಯಲು ಧ್ಯಾನಸ್ಥ ಸ್ಥಿತಿಯಲ್ಲಿ ಕವಿ ಹಗಲಿರುಳು ಸಾಧನೆ ಮಾಡಬೇಕು. ಕವಿತೆಯೇ , ತಪಸ್ಸಾಗಿ ಬದುಕಬೇಕು. ಒಳಗೊಳಗಿಂದಲೇ ಅರಳಬೇಕು. ಒಳಲೋಕದಿಂದ ಕವಿತೆ ಹುಟ್ಟುವ ಇನ್ನೊಂದು ವಿಧಾನ, ಕವಿಯ ತೀವ್ರ ಭಾವೋತ್ಕರ್ಷದ ಹರಿವು. ಬೇಂದ್ರೆಯವರ ಮಗನ ಸಾವಿನ ಸಂದರ್ಭದಲ್ಲಿ ತಮ್ಮ ಪತ್ನಿಯ ಕಣ್ಣೊಳಗೆ ಕಣ್ಣಿಟ್ಟು ನೋಡುವ ಕವಿ, ನೋವಿನ, ಹತಾಶೆಯ, ಅಸಹಾಯಕತೆಯ ಭಾವದ ತುರೀಯಕ್ಕೆ ತಲಪಿದಾಗ” ನೀ ಹೀಂಗ ನೋಡ ಬ್ಯಾಡ ನನ್ನ” ದಂತಹಾ ಕವಿತೆ ಜನ್ಮಿಸುತ್ತೆ. ಹೀಗೆ ಅಂತರಾಳದಿಂದ ರೂಪ ಪಡೆದು ಹೊರಬರುವ ಕವಿತೆಯ ಸ್ವರೂಪದಲ್ಲಿ ಯಾವುದೇ ಪೂರ್ವಯೋಜನೆ ಇರುವುದಿಲ್ಲ. ಈ ಕವಿತೆಯ,ಚಂದ, ಛಂದ, ಅರ್ಥ ಎಲ್ಲವೂ ಆ ಕ್ಷಣದ ಆ ಸ್ಥಿತಿಯ ಕ್ರೋಮೋಸೋಮ್ ಗಳ ಅಭಿವ್ಯಕ್ತಿ. ಕಾವ್ಯ ಹುಟ್ಟುವ ಇನ್ನೊಂದು ಬಗೆ, ಕಥಾ ಪಾತ್ರದೊಳಗೆ ಕವಿ ಮಾಡುವ ಪರಕಾಯ ಪ್ರವೇಶ. ಹಾಗೆ ಪ್ರವೇಶಿಸಿದ ಕವಿ, ಆ ಪಾತ್ರದ ಅಷ್ಟೂ ಅನುಭವಗಳನ್ನು, ಸ್ವಂತವಾಗಿಸಿ, ಹನಿಯಾಗಿ ಜಿನುಗುತ್ತಾನೆ. ಹೆಚ್.ಎಸ್.ವಿ. ಅವರು ಅಭಿನಯ ಮತ್ತು ಕಾವ್ಯ ಸೃಷ್ಟಿಯ ಬಗ್ಗೆ ಹೀಗೆ ಹೇಳುತ್ತಾರೆ. ” ಬರವಣಿಗೆಯಲ್ಲಿ ಅಭಿನಯವೇ ಇದೆಯಲ್ಲವೇ? ಕಾವ್ಯ, ಕಥೆ ಬರೆಯುವಾಗ ಅನೇಕ ಪಾತ್ರಗಳು ಬರುತ್ತವೆ. ಆ ಪಾತ್ರ ನಾನಾಗದೇ ಬರಹದಲ್ಲಿ ಸಹಜತೆ ಬರುವುದಿಲ್ಲ. ಬುದ್ಧಚರಿತವನ್ನೇ ನೋಡು, ರಾಹುಲನ ಮಾತುಗಳನ್ನು ನಾನು ಬರೆಯಬೇಕಾದರೆ ರಾಹುಲನನ್ನು ನಾನು ಆವಾಹಿಸಿಕೊಳ್ಳಬೇಕು. ಸೀತೆಯಾಗಬೇಕಾದರೆ ಸೀತೆಯ ಹೆಣ್ತನವನ್ನು ನಾನು ಪಡೆಯದಿದ್ದರೆ ಸಹಜತೆ ಬರುವುದಿಲ್ಲ. ಕವಿಯ ಮನಸ್ಸು ಅನೇಕ ಸ್ಥರಗಳಲ್ಲಿ ಸಂಚಾರ ಮಾಡುತ್ತಿರುತ್ತದೆ. ವಿಫುಲ ರೂಪ ಧಾರಿಣಿ ಕವಿಯ ಮನಸ್ಸು ಎಂದು ಕುವೆಂಪು ಹೇಳಿಲ್ಲವೇ. ಹಾಗೆ ಬರವಣಿಗೆ ಎಂಬುದು ಅಂತರಂಗದಲ್ಲಿ ಅಭಿನಯ. ಸಿನಿಮಾ, ನಾಟಕ ಎಂಬುದು ಬಹಿರಂಗದಲ್ಲಿ ತೋರಿಸಬೇಕಾದ್ದು.ಕವಿತೆ ಕಷ್ಟ ಏಕೆಂದರೆ ಅದರಲ್ಲಿ ಬರುವ ಎಲ್ಲಾ ಪಾತ್ರಗಳನ್ನೂ ಕವಿ ಅಭಿನಯಿಸಬೇಕು” ಹರಿಶ್ಚಂದ್ರ ಕಾವ್ಯದಲ್ಲಿ, ಚಂದ್ರಮತಿ, ತನ್ನ ಮಗ ಹಾವು ಕಚ್ಚಿ ಸತ್ತಾಗ, ವಿಲಪಿಸುವ ಸಾಲುಗಳು ಹೀಗಿವೆ. “ಬಂದರಂ ಲೋಹಿತಾಶ್ವಾ ಎಂದು ಬಟ್ಟೆಯೊಳು ನಿಂದರಂ ಲೋಹಿತಾಶ್ವಾ ಎಂದು ಗಾಳಿ ಗಿಱಿಕೆಂದಡಂ ಲೋಹಿತಾಶ್ವಾ ಎಂದು ಕರೆಕರೆದು ಬಿಡೆ ಬೀದಿಗಱುವಿನಂತೆ ಮಂದಮತಿಯಾಗಿರ್ದ ಚಂದ್ರಮತಿಗೊಬ್ಬನೈ ತಂದಿಂದು ಕೂಡೆ ಹೋಗಿರ್ದು ಕಂಡೆಂ ನಿನ್ನ ಕಂದನೊಂದುಗ್ರಫಣಿ ತಿಂದು ಜೀವಂಗಳೆದನೆಂದು ಹೇಳಿದನಾಗಳು” ಚಂದ್ರಮತಿಯ ಪ್ರಲಾಪ, ಕನ್ನಡ ಕಾವ್ಯಜಗತ್ತಿನ ಇತಿಹಾಸದಲ್ಲಿ ದುಃಖ ರಸದ ಮನಮುಟ್ಟುವ ಅಭಿವ್ಯಕ್ತಿಯಾಗಿ ಪರಿಗಣಿಸಲ್ಪಡುವುದರ ಹಿಂದೆ, ರಾಘವಾಂಕ ಕವಿ, ಚಂದ್ರಮತಿಯ ಪಾತ್ರದೊಳಗೆ ಹೊಕ್ಕು, ಮಗನ ಸಾವಿನ ತೀವ್ರ ಶೋಕದ ಅನುಭೂತಿಯನ್ನು ಅನುಭವಿಸಿ ಪಾತ್ರವೇ ತಾನಾಗಿ,ಬರೆದದ್ದು ಕಾರಣವಲ್ಲವೇ. ಕವಿತೆ ಹುಟ್ಟಲೇಬೇಕೇ?. ಕವಿತೆಯನ್ನು ಕಟ್ಟಲೂ ಬಹುದು. ಪ್ರಕೃತಿಯಿಂದ ಪ್ರೇರಣೆ ಪಡೆದು, ಬದುಕು ಕಟ್ಟಿಕೊಡುವ ಅನುಭವದ ಕಡುಬನ್ನು ಮೆದ್ದು ಅದರ ಆಧಾರದಲ್ಲಿ, ನವರಸಗಳ ಪಾಕ ಬಡಿಸಬಹುದು. ದೇಶ, ಸಮಾಜ, ಗಗನ, ಸೂರ್ಯ,ನದಿ, ಪ್ರೀತಿ, ಹೀಗೆ ಹತ್ತು ಹಲವು ನೂಲೆಳೆಗಳನ್ನು ನೇಯ್ದು ಪದ್ಯಮಾಡಬಹುದು. ಕವಿಗೆ ನಿಜ ಜೀವನದ ವಸ್ತುವೇ ಕಾವ್ಯ ವಾಸ್ತುವಾಗಿ ಕೆಲವೊಮ್ಮೆ ಹೊಲದ ನಡುವಿನ ಗುಡಿಸಲು, ಮತ್ತೊಮ್ಮೆ ಗಗನ ಚುಂಬಿ ಕಟ್ಟಡಗಳು, ಬಗೆ ಬಗೆಯ ಕಟ್ಟಡಗಳಂತಹ ಕವಿತೆಗಳು ನೆಲದ ಅಡಿಪಾಯದ ಮೇಲೆ ಎದ್ದು ನಿಲ್ಲುತ್ತವೆ. ಗುಂಪು ಗುಂಪಾಗಿ ಓಡುವ ಕುರಿಮಂದೆಯನ್ನು ಕಂಡಾಗ, ಕವಿ ನಿಸಾರ್ ಅಹಮದ್ ಅವರು ಹೀಗೊಂದು ಅಪೂರ್ವ ಕವಿತೆ ಬರೆಯುತ್ತಾರೆ. ” ಕುರಿಗಳು ಸಾರ್ ಕುರಿಗಳು ಸಾಗಿದ್ದೇ ಗುರಿಗಳು ಮಂದೆಯಲ್ಲಿ ಒಂದಾಗಿ ಸ್ವಂತತೆಯೇ ಬಂದಾಗಿ ಅದರ ಬಾಲ ಇದು ಮತ್ತೆ ಇದರ ಬಾಲ ಅದು ಮೂಸಿ ದನಿ ಕುಗ್ಗಿಸಿ ತಲೆ ತಗ್ಗಿಸಿ ಅಂಡಲೆಯುವ ನಾವು ನೀವು ಎಡ ದಿಕ್ಕಿಗೆ ಬಲ ದಿಕ್ಕಿಗೆ, ಒಮ್ಮೆ ದಿಕ್ಕುಪಾಲಾಗಿ ಹೇಗೆ ಹೇಗೋ ಏಗುತಿರುವ ಬರೀ ಕಿರುಚಿ ರೇಗುತಿರುವ ನೊಣ ಕೂತರೆ ಬಾಗುತಿರುವ ತಿನ್ನದಿದ್ದರು ತೇಗುತಿರುವ ಹಿಂದೆ ಬಂದರೊದೆಯದ ಮುಂದೆ ಬರಲು ಹಾಯದ ನಾವು ನೀವು ಅವರು ಇವರು ನಮ್ಮ ಕಾಯ್ವ ಕುರುಬರು” ಕಾಣುವ ವಸ್ತು, ಕ್ರಿಯೆ ಮತ್ತು ಡೈನಾಮಿಕ್ಸ್, ಕವಿಯ ಮನಸ್ಸೊಳಗೆ ಹಲವು ಕಲ್ಪನೆಗಳಿಗೆ, ಚಿಂತನೆಗಳಿಗೆ ಪ್ರೇರಣೆಯಾಗುತ್ತೆ. ಏನೋ ಹೇಳಬೇಕಾದ ತುಡಿತ, ಸಂದೇಶದ ಸಮೀಕರಣವಾಗಿ, ಹಲವು ಪ್ರತಿಮೆಗಳ ಮೂಲಕ ಕಾವ್ಯಕಟ್ಟಡವನ್ನು ಕವಿ ಕಟ್ಟುತ್ತಾರೆ. ಬೇಲೂರಿನ ಚನ್ನಕೇಶವ ದೇವಾಲಯದ ಶಿಲಾ ಪ್ರತಿಮೆಗಳು ಗೋಡೆಗಳಲ್ಲಿ ಸಾಲುಗಟ್ಟಿ ಒಂದು ಕತೆಯನ್ನು ಹೇಳುವ ಹಾಗೆಯೇ ಇದೂ. ಮೇಲಿನ ಕವಿತೆಯಲ್ಲಿ, ಕುರಿಗಳು ಅಂದರೆ ಬಹುಮುಖೀ ಪ್ರತಿಮೆ ಎಂದು ಬೇರೆ ಹೇಳಬೇಕಾಗಿಲ್ಲ ತಾನೇ. ನವ್ಯ ಮತ್ತು ನಂತರದ ಇಂತಹಾ ಕವಿತೆಗಳು ಅಬ್ಸ್ಟ್ರಾಕ್ಟ್ ಆಗಿರುವುದರಿಂದ, ಇವುಗಳ ಅರ್ಥ ಓದುಗನ ಗ್ರಹಿಕೆಗೆ, ಹ್ರಹಿಸುವ ಮನಸ್ಸಿನ ಪರದೆಯ ವಿನ್ಯಾಸಕ್ಕೆ ಸಾಪೇಕ್ಷವಾಗಿರುತ್ತೆ. ಕವಿತೆ ಕಟ್ಟುವ ಕ್ರಿಯೆಯಲ್ಲಿ, ಕವಿ ಮೊದಲೇ ಒಂದು ಪದಹಂದರದೊಳಗೆ ತನಗೆ ಹೇಳಬೇಕಾದ ಅರ್ಥ ತುಂಬಿ, ವ್ಯವಸ್ಥೆ ಯೊಳಗೆ ಹರಿಯಬಿಟ್ಟು, ಸಂಚಲನವೆಬ್ಬಿಸುವುದೂ ಒಂದು ಬಗೆ. ಸಮಾಜವಾದ, ಮಾರ್ಕ್ಸ್ ವಾದ, ಮಾನವತಾವಾದ, ಪರಿಸರವಾದ, ಹೀಗೆ ಹತ್ತು ಹಲವು ‘ಇಸಂ’ ಗಳನ್ನು ತನ್ನ ವಾಸ್ತುವಿನೊಳಗೆ ತುಂಬಿಸಿಕೊಂಡ ಕವಿತೆಗಳು ಕಳೆದ ಹಲವು ದಶಕಗಳಲ್ಲಿ ಮೂರ್ತರೂಪ ಪಡೆದಿವೆ. ಸಮಾಜದ ಬದಲಾವಣೆಗಾಗಿ, ಸಾಮಾಜಿಕ ಪ್ರಜ್ಞೆಯನ್ನು ಬಡಿದೆಬ್ಬಿಸಿ, ಸಮಾಜದ ಅಂಕು ಡೊಂಕುಗಳನ್ನು ತಿದ್ದುವತ್ತ ಕವಿತೆಯನ್ನು ದುಡಿಸಿಕೊಳ್ಳುವ ಪ್ರಯತ್ನ ಇದು. ಕವಿತೆ ಬರೆಯಲು ಏಕಾಂತ ಬೇಕು. ಏಕಾಂತದೊಳಗೆ ಮನಸ್ಸು ಮೌನವಾಗ ಬೇಕು. ಇದೊಂದು ಥರಾ ಧ್ಯಾನದ ಹಾಗೆ. ನಿಧಾನವಾಗಿ ಮನಸ್ಸು ಅದರೊಳಗೆ ಇಳಿಯುತ್ತಾ, ಇಳಿದಂತೆ ಮನಸ್ಸು, ಕಾವ್ಯವಸ್ತುವಿನಲ್ಲಿ ಕೇಂದ್ರೀಕರಿಸಿ ಯಾವುದೋ ಒಂದು ಹಂತದಲ್ಲಿ ಕವಿತೆ ಅವತರಿಸಿ ಸಾಲುಗಳು ಹರಿಯುತ್ತವೆ. ಯಶವಂತ ಚಿತ್ತಾಲರು ಬೆಳಗ್ಗೆ ಮೂರು ಗಂಟೆಗೆ ಎದ್ದು, ದೀಪದ ಬೆಳಕಿನಲ್ಲಿ ಕತೆ ಬರೆಯುತ್ತಿದ್ದರಂತೆ. ಸುತ್ತಲೂ ಕತ್ತಲು, ದೀಪವೊಂದೇ ಜ್ಯೋತಿ. ಆ ಏಕಾಂತದಲ್ಲಿ ಜ್ಯೋತಿಗೆ ನೋಟ ಸಂಧಿಸಿದಾಗ ಕತೆಯ ಪಾತ್ರಗಳು ನಿಧಾನವಾಗಿ ನಿಚ್ಚಳವಾಗಿ ಕಣ್ಣಲ್ಲಿ ರೂಪುಗೊಂಡು ಕತೆಯಾಗುತ್ತಿದ್ದವಂತೆ. ಬೆಳಗಾದಂತೆ, ದೀಪದ ಜ್ಯೋತಿ ಮಂಜಾಗಿ ಕತೆಯ ಪಾತ್ರಗಳೂ ಮಾಯವಾದಾಗ ಕತೆ ಬರೆಯುವುದು ನಿಲ್ಲಿಸುತ್ತಿದ್ದರು,ಎಂದು ಹಿಂದೆಂದೋ ಓದಿದ ನೆನಪು. ಇಂತಹಾ ಅನುಸಂಧಾನದ ಜತೆಗೆ ಕವಿತೆ ಬರೆಯಲು ಅಗತ್ಯವಾದ ಸಾಹಿತ್ಯದ ಪರಿಣತಿ, ಪರಿಸರದತ್ತ, ಜೀವಪ್ರಪಂಚದ ಕಷ್ಟ ಸುಖಗಳತ್ತ ಸೂಕ್ಷ್ಮ ಸ್ಪಂದನೆ, ಕಲ್ಪನಾ ಸಾಮರ್ಥ್ಯ ಕೂಡಾ ಅಗತ್ಯ. ಹಾಗೆ ಪಕ್ವವಾದ ಕವಿಗೆ ಕವಿತೆ ಬರೆಯುವ ಚಾಲೆಂಜ್ ನೀವು ಕೊಡಬಹುದು. ಸಿನೆಮಾ, ನಾಟಕ, ಸೀರಿಯಲ್, ಗಳ ದೃಶ್ಯಕ್ಕೆ ಪೂರಕವಾದ ಕವಿತೆಗಳು ಒಂದು ರೀತಿಯಲ್ಲಿ ಹೊಸತನದ ತೆನೆಯೇ. ಉದಾಹರಣೆಗೆ, ಮುಕ್ತ
ಕವಿತೆ ಪತ್ರ ಅಕ್ಷತಾ ಜಗದೀಶ. ನೋಡ ನೋಡುತ್ತಲೇ ಮರೆಯಾಯಿತುತಿಂಗಳಿಗೊಮ್ಮೆ ಬರುತ್ತಿದ್ದ ಪತ್ರಲೇಖನಿ ಹಿಡಿದುಮಧುರ ಬಾಂಧವ್ಯ ನೆನೆದುಅಕ್ಷರ ಮಾಲೆಯೊಳುಸಂಬಂಧ ಪೋಣಿಸಿ ಬರೆದುಹತ್ತಿರ ಬೆಸೆಯುತ್ತಿದ್ದ ಪತ್ರಈಗ ಕೇವಲ ನೆನಪು ಮಾತ್ರ! ನೋವು ನಲಿವಿನಲ್ಲಿ ಜೋತೆಯಾಗಿದ್ದಪತ್ರ…ಬಂಧುಗಳೊಡನೆ ಬಾಂಧವ್ಯ ಬೆಸೆಯಲುಸೇತುವೆಯಾಗಿದ್ದ ಪತ್ರ..ಅಗಾಧವಾದ ಮಾತುಗಳನುಮಿತಗೊಳಿಸಿ ವ್ಯಕ್ತಪಡಿಸುತ್ತಿದ್ದಪತ್ರ..ಈಗ ಕೇವಲ ನೆನಪು ಮಾತ್ರ! ಎಷ್ಟೇ ಆಧುನಿಕತೆಯ ಉಪಕರಣಬಂದರುಪತ್ರಕ್ಕೆ ಸರಿಸಮನಾಗಿ ನಿಲ್ಲಲಾರರುನೆನಪುಗಳಲಿ ನೆನೆಪಾಗಿನೆನಪನ್ನೇ ನೆನಪಿಸುವ ಪತ್ರಈಗ ಕೇವಲ ನೆನಪು ಮಾತ್ರ… ************************
ಕವಿತೆ ಸಂಕ್ರಾಂತಿ ಬೆೇಕಿದೆ ಹಸಿದು ಉಸಿರು ಹಿಡಿದುಬದುಕುತ ಅಳುವಮಗುವಿಗೆ ಹಾಲುಣಿಸಲುಮಮತೆಯಸಂಕ್ರಾಂತಿ ಬೇಕಿದೆ ಧಾನ್ಯ ಭೊಗಸೆಯಲಿಟ್ಟುಬತ್ತಿದ ಹೊಟ್ಟೆಬಡಬಾಗ್ನಿಯಲಿಬೇಯುವ ಮನುಜಗೆಮಾನವೀಯತೆಯಸಂಕ್ರಾಂತಿ ಬೇಕಿದೆ ಅಕಾಲ ವೃಷ್ಟಿಗೆಎದೆಒಡ್ಡಿ ಕಾಳುಹೆಕ್ಕಲು ಕಣ್ಣೀರಿಕ್ಕುವನೇತ್ರ ಇಂಗಿದಮನುಕುಲಕೆಬೇಕಿದೆ ಸಂಕ್ರಾಂತಿಸಂಕ್ರಾಂತಿ ಬೇಕಿದೆ ನೆಲಕಚ್ಚಿದ ನೆಗಿಲಉಸಿರು ಹಸಿರಾಗಿಸಿಗುಡಿಸಲುಗಳುಗುಡಿಯನುವಹೃದಯತೆಯ ಸಂಕ್ರಾಂತಿಸಂಕ್ರಾಂತಿ ಬೇಕಿದೆ ಖಾದಿ ಖಾಕಿ ಕಾವಿಯತೊಟ್ಟುಕಪಟತೆಯ ಕೈಯಲ್ಲಿಚೀಲ ತುಂಬುವಭಕ್ಷಕರ ಆತ್ಮಸಾಕ್ಷಿಗೆಸಂಕ್ರಾಂತಿ ಬೇಕಿದೆ ಬಾಳುನೀಡುವಭಾಗ್ಯದಾತೆಯಬರಿಮೈಯಾಗಿಸಿರಕ್ತ ಹೀರುವರಾಕ್ಷಸರ ಸಂಹಾರಕ್ಕೆಸಂಕ್ರಾಂತಿ ಬೇಕಿದೆ ಅಪರಿಮಿತ ಬುದ್ಧಿ ಶಕ್ತಿಯಅಡವಿಟ್ಟು ಆಮಿಷಕೆಅಣು ರೇಣು ತೃಣ ಕಾಷ್ಟಗಳುಕ್ಷಣ ಮಾತ್ರದಲಿಭಸ್ಮವೀಯುವಕ್ರೊರತೆಗೆಸಂಕ್ರಾಂತಿ ಬೇಕಿದೆ ಮನದ ವ್ಯಾಪಾರಕೆಮನುಜ ಕುಲವಿಕ್ರಯಿಸುವಅಮಾನುಶತೆಗೆಬೇಕಿದೆ ಸಂಕ್ರಾಂತಿಸಂಕ್ರಾಂತಿ ಬೇಕಿದೆ ಬದುಕ ಬೇರೆನಿಪನೆಲ ಜಲಮರ ಗಿಡ ಪಶು ಪಕ್ಷಿಗಳಕೊಗಿಗೆ ದನಿ ಎನಿಪ ಸಂಕ್ರಾಂತಿಸಂಕ್ರಾಂತಿ ಬೇಕಿದೆ ಮನುಜಕುಲಕೆ ಬೇಕಿದೆಪ್ರೀತಿ ವಾತ್ಸಲ್ಯಮಾನವೀಯತೆಯಸಂಕ್ರಾಂತಿಸಂಕ್ರಾಂತಿ ಬೇಕಿದೆ ********************************************* ಶಾಂತಲಾ ಮಧು
You cannot copy content of this page