ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಹೀಗೆ

ಕವಿತೆ ಹೀಗೆ ಗೋನವಾರ ಕಿಶನ್ ರಾವ್ ಹೆಣ್ಣೆಂದರೆ,ಪೂಜೆ-ಅಸಡ್ಡೆಉಭಯನೀತಿ,ಕೀಳು,ಅವಮಾನ- ಅತ್ಯಾಚಾರ, ಭರತವರ್ಷೇ,ಭರತಖಂಡೇ ಜಂಬೂ ದ್ವೀಪದಿ,ಗಂಡುಕಾಮಿಗಳ,ಹೀನಾಯ, ನಡೆ,ಪುರುಷಗಣಗಳಿಗೆಲ್ಲಚುಕ್ಕೆಬೊಟ್ಟು ನೆನಪು.ತವರು ಮನೆಗೆ ಬಂದ ಹೆಣ್ಣುವರುಷದಲಿ , ಹುಟ್ಟಿದ ಕೋಣೆತೋರಿಸಲು ತವರಿಗೆಮತ್ತೆ ಹುಟ್ಟಿ ಬೆಳೆದ ಮನೆಯನೇನೋಡುವ ಮತ್ತೆ ಮತ್ತೆ ನೋಡುವಕಹಿ ಚಪಲ, ಮನೆ-ಮನವ ಮುರಿದಿರುವಕ್ರೂರ ಜಗದ ಈ ಕೆಟ್ಟಗಂಡುಗಳ ಸಂತೆ ನಿರ್ಭಯದ ಅಂಗಡಿಯಲಿಸಾವು ಕೊಳ್ಳುವ ಅ ದಂಡುಪಾಠ ಕಲಿಯದೆ ಮತ್ತೆಹತರಾಸ್!! ಕಲಿತದ್ದು ರಾವಣನಿಂದ ?ಕೀಚಕನಿಂದ ?ಅವರು ಮಣ್ಣಾದರೂಇವರು, ಗಲ್ಲಾ ದರೂ……… ಹೀಗಾದರೆ ? ಹೇಗೆ ? ತಡವಾಗಿ ಬಂದ ಉತ್ತರವಿರದಪ್ರಶ್ನೆ,! ಶೇಷ ಪ್ರಶ್ನೆ ?? *****************************************************

ಹೀಗೆ Read Post »

ಅಂಕಣ ಸಂಗಾತಿ, ಕೇರಿ ಕೊಪ್ಪಗಳ ನಡುವೆ

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-11 ಆತ್ಮಾನುಸಂಧಾನ ಕೇರಿ — ಕೊಪ್ಪಗಳ ನಡುವೆ…. ಬನವಾಸಿಯಿಂದ ಅಪ್ಪನಿಗೆ ಅಂಕೋಲಾ ತಾಲೂಕಿನ ಮಂಜಗುಣಿ ಎಂಬ ಊರಿನ ಶಾಲೆಗೆ ವರ್ಗವಾಯಿತು. ನಮ್ಮ ಪರಿವಾರ ನಾಡುಮಾಸ್ಕೇರಿಯಲ್ಲಿ ಮತ್ತೆ ನೆಲೆಸುವ ಅವಕಾಶ ಪಡೆಯಿತು. ಅಪ್ಪ ದಿನವೂ ಗಂಗಾವಳಿ ನದಿ ದಾಟಿ ಮಂಜಗುಣೆಯ ಶಾಲೆಗೆ ಹೋಗಿ ಬರುತ್ತಿದ್ದರೆ ನಾನು ಸಮೀಪದ ಜೋಗಣೆ ಗುಡ್ಡ’ ಎಂಬ ಭಾಗದಲ್ಲಿರುವ ಪೂರ್ಣ ಪ್ರಾಥಮಿಕ ಶಾಲೆಗೆ ಏಳನೆಯ ತರಗತಿಯ ಪ್ರವೇಶ ಪಡೆದುಕೊಂಡಿದ್ದೆ. ತಮ್ಮ, ತಂಗಿಯರು ಮನೆಯ ಸಮೀಪವೇ ಇರುವ ಕಿರಿಯ ಪ್ರಾಥಮಿಕ ಶಾಲೆಗೆ ಸೇರಿಕೊಂಡರು.             ನಾಡುಮಾಸ್ಕೇರಿಯ ವಾಸ್ತವ್ಯದ ಈ ಕಾಲಾವಧಿ ನನಗೆ ಕಲಿಸಿದ ಪಾಠ, ನೀಡಿದ ಅನುಭವ ಬಹಳ ಅಮೂಲ್ಯವಾದದ್ದು. ಇಲ್ಲಿ ಬಾಲ್ಯದ ಎಲ್ಲ ಸಂತಸದ ಅನುಭವಗಳೊಡನೆಯೇ ಅನೇಕ ಕಹಿ ಸಂದರ್ಭಗಳಿಗೂ ಮುಖಾಮುಖಿಯಾಗುವ ಅವಕಾಶ ಒದಗಿ ಬಂತು. ಜೀವ ವಿಕಾಸದ ಅನೇಕ ನಿಗೂಢತೆಗಳಿಗೆ ಮನಸ್ಸು ತೆರೆದುಕೊಂಡದ್ದೂ ಈ ಮಾಸ್ಕೇರಿಯಲ್ಲಿಯೇ.             ೬೨-೬೩ ರ ನೆರೆ ಹಾವಳಿ ನಮ್ಮ ಊರಿನಲ್ಲೂ ಅನೇಕ ಅವಾಂತರಗಳನ್ನು ಸೃಷ್ಠಿಸಿತ್ತು. ನಮ್ಮ ಜಾತಿಯ ಹಲವಾರು ಕುಟುಂಬಗಳು ತಮ್ಮ ಸ್ವಂತದ್ದಲ್ಲದ ಒಡೆಯರ ತುಂಡು ಭೂಮಿಯಲ್ಲಿ ಅಲ್ಲಿ ಇಲ್ಲಿ ಗುಡಿಸಲು ಹಾಕಿಕೊಂಡು ಬಾಳುವೆ ನಡೆಸುತ್ತಿದ್ದರು. ಅವುಗಳೆಲ್ಲಾ ನೆರೆಹಾವಳಿಯಲ್ಲಿ ನಾಶವಾಗಿ ನೆಲೆ ಕಳೆದುಕೊಂಡಿದ್ದರು. ಪರಿಸ್ಥಿತಿಯನ್ನು ಅರಿತ ನಮ್ಮ ತಂದೆಯವರು ಓದು ಬರಹ ಬಲ್ಲವರಾದ್ದರಿಂದ ಬನವಾಸಿಯಲ್ಲಿ ಇರುವಾಗಲೇ ನಮ್ಮವರ ಕಷ್ಟಗಳು ಸರಕಾರಕ್ಕೆ ಮನವರಿಕೆಯಾಗುವಂತೆ ಅರ್ಜಿ ಬರೆದು ಎಲ್ಲರಿಗೂ ಜಮೀನು ಮತ್ತು ಮನೆ ಮಂಜೂರಿಯಾಗುವಂತೆ ಮಾಡಿದ್ದರು. ನಾವು ಮರಳಿ ನಾಡುಮಾಸ್ಕೇರಿಗೆ ಬಂದು ನೆಲೆಸುವ ಹೊತ್ತಿಗೆ ಎಲ್ಲ ನಿರಾಶ್ರಿತ ಕುಟುಂಬಗಳಿಗೆ ತಲಾ ಐದು ಗುಂಟೆ ಭೂಮಿ ಮತ್ತು ಜನತಾ ಮನೆಗಳು ಮಂಜೂರಿಯಾಗಿ ಮನೆ ಕಟ್ಟುವ ಕೆಲಸ ಆರಂಭವಾಗಿತ್ತು.             ನಾಡು ಮಾಸ್ಕೇರಿಯ ನಾಡವರ ಕೊಪ್ಪದಿಂದ ಹಾರು ಮಾಸ್ಕೇರಿಯ ಬ್ರಾಹ್ಮಣರ ಮನೆಯವರೆಗೆ ವಿಶಾಲವಾದ ಬಯಲು ಪ್ರದೇಶವಿತ್ತು. ದನ-ಕರು ಸಾಕಿಕೊಂಡವರಿಗೆಲ್ಲ ಅದು ಗೋಮಾಳ’ದಂತೆ ದನ ಮೇಯಿಸುವ ಸ್ಥಳವಾಗಿತ್ತು. ಅದರ ಒಂದು ಭಾಗದಲ್ಲಿ ಆಗೇರರಿಗೆಲ್ಲಾ ಜಮೀನು ಹಂಚಿಕೆಯಾಗಿತ್ತು. ಉಳಿದ ಭಾಗವನ್ನು ಗೋಮಾಳವೆಂದೂ, ಆಟದ ಬಯಲು ಎಂದೂ ಬಿಟ್ಟಿದ್ದರು. ಹೀಗೆ ಊರಿನಲ್ಲಿ ಅಲ್ಲಿ ಇಲ್ಲಿ ಅನ್ಯರ ನೆಲದಲ್ಲಿ ಆಶ್ರಯ ಪಡೆದ ಆಗೇರರು ಒಂದು ನಿರ್ದಿಷ್ಟ ಸ್ಥಳದಲ್ಲಿ ಜನತಾ ಮನೆಗಳನ್ನು ಕಟ್ಟಿಕೊಂಡು ನೆಲೆಸುತ್ತಾ ಆಗೇರಕೇರಿ’ಯೊಂದು ನಿರ್ಮಾಣವಾಯಿತು.             ಗೋಮಾಳದ ಬಯಲು ದಾಟಿದ ಬಳಿಕ ಒತ್ತಾಗಿ ಇರುವ ನಾಡವರ ಮನೆಗಳು ಮತ್ತು ಮನೆಯ ಸುತ್ತ ಸೊಂಪಾಗಿ ಬೆಳೆದು ನಿಂತ ತೆಂಗು, ಅಡಿಕೆ, ಬಾಳೆ ಮತ್ತಿತರ ಗಿಡಮರಗಳ ಕಾರಣದಿಂದ ಬಹುಶಃ ನಾಡವರ ಕೇರಿಯನ್ನು ಕೇರಿ’ ಎನ್ನದೆ ನಾಡವರ ಕೊಪ್ಪ’ ಎಂದು ಕರೆಯುತ್ತಿರಬೇಕು. ಕೇರಿಯ ಬಹುತೇಕ ಎಲ್ಲರೂ ಕೊಪ್ಪದ ಹಂಗಿನಲ್ಲೇ ಬಾಳಬೇಕಾದ ಅನಿವಾರ್ಯತೆ ಇದ್ದವರು. ನಾಡವರ ಕೃಷಿ ಭೂಮಿಯ ಕೆಲಸಗಳು, ಮನೆಯ ಕಸ ಮುಸುರೆ ಇತ್ಯಾದಿ ಕಾಯಕದಿಂದ ಆಗೇರರ ಬಹಳಷ್ಟು ಕುಟುಂಬಗಳು ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಹಾಗಾಗಿ ಕೇರಿ-ಕೊಪ್ಪಗಳ ನಡುವೆ ಸಹಜವಾಗಿಯೇ ವ್ಯವಹಾರಿಕ ಸಂಬಂಧ ಬೆಸೆದುಕೊಂಡಿತ್ತು. ನಮ್ಮ ಕೇರಿಯ ಬಹಳಷ್ಟು ಜನ ತಮ್ಮ ಮದುವೆಗಾಗಿ ಜಮೀನ್ದಾರರಾಗಿದ್ದ ನಾಡವರಿಂದ ಸಾಲಪಡೆದು ಗಂಡ ಹೆಂಡತಿ ಇಬ್ಬರೂ ಜೀತದ ಆಳುಗಳಾಗಿ ದುಡಿಯುತ್ತಿದ್ದರು. ಮುಂದೆ ಈ ದಂಪತಿಗಳಿಗೆ ಹುಟ್ಟಿದ ಮಕ್ಕಳು ಕೂಡಾ ಇದೇ ಒಡೆಯನ ಮನೆಯ ಆಳಾಗಿ ದುಡಿಯುತ್ತ ಅಗತ್ಯವಾದರೆ ತಮ್ಮ ಮದುವೆಗೂ ಒಡೆಯನಿಂದ ಸಾಲ ಪಡೆಯುತ್ತ ಜೀತ ಪರಂಪರೆಯನ್ನು ಬಹುತೇಕ ಮುಂದುವರಿಸುತ್ತಿದ್ದರು. ಸಾಲ ಪಡೆಯದೆ ಜೀತದಿಂದ ಹೊರಗಿದ್ದವರೂ ಕೂಡ ದೈನಂದಿನ ಅನ್ನ ಸಂಪಾದನೆಗಾಗಿ ಇದೇ ಒಡೆಯರ ಮನೆಗಳಲ್ಲಿ, ಹೊಲಗಳಲ್ಲಿ ಚಾಕರಿ ಮಾಡುತ್ತ ಜೀವನ ನಿರ್ವಹಣೆ ಮಾಡುತ್ತಿದ್ದರು. ನಾಡವರ ಮನೆಗಳ ಕಸ-ಮುಸುರೆ, ತೋಟದ ಕೆಲಸ, ಬೆಸಾಯದ ಭೂಮಿಯಲ್ಲಿ ದುಡಿಮೆ ಇತ್ಯಾದಿಗಳನ್ನು ಮಾಡುತ್ತ ಕೇರಿಯ ಜನ ಕೊಪ್ಪದ ಯಜಮಾನರುಗಳೊಂದಿಗೆ ಅನ್ಯೋನ್ಯವಾಗಿಯೇ ಹೊಂದಿಕೊಂಡಿದ್ದರು. ಹಬ್ಬ-ಹುಣ್ಣಿಮೆ, ಯಜಮಾನರ ಮನೆಯ ಮದುವೆ, ಹರಿದಿನ ಮೊದಲಾದ ಸಮಾರಂಭಗಳಲ್ಲಿ ನಮ್ಮ ಕೇರಿಯ ಜನ ಪಾತ್ರೆಗಳನ್ನೊಯ್ದು ಒಡೆಯರ ಮನೆಗಳಿಂದ ಅನ್ನ, ಪಾಯಸ ಇತ್ಯಾದಿಗಳನ್ನು ಬಡಸಿಕೊಂಡು’ ಬಂದು ಮನೆ ಮಂದಿಯೆಲ್ಲ ಹಂಚಿಕೊಂಡು ಉಣ್ಣುತ್ತಿದ್ದರು. ದೀಪಾವಳಿ, ಯುಗಾದಿ, ಚೌತಿ, ತುಳಸಿ ಹಬ್ಬ ಮುಂತಾದ ವಿಶೇಷ ಹಬ್ಬಗಳ ದಿನ ಸಂಜೆಯ ಹೊತ್ತು ಕೇರಿಯ ಹೆಂಗಸರು ಮಕ್ಕಳೆಲ್ಲ ಒಂದೊಂದು ಹಚ್ಚಿಗೆ’ (ಬಿದಿರಿನ ಬುಟ್ಟಿ) ಅಥವಾ ಕೈಚೀಲ ಹಿಡಿದು ಕೊಪ್ಪದ ಮನೆಮನೆಯ ಮುಂದೆ ನಿಂತು ರೊಟ್ಟಿ ಬೇಡುವ’ ಅನಿಷ್ಟ ಪದ್ಧತಿಯೂ ಆಗ ಚಾಲ್ತಿಯಲ್ಲಿತ್ತು. ಇದು ಅತ್ಯಂತ ದೈನೇಸಿ ಕ್ರಮವೆಂಬ ಅರಿವಿಲ್ಲದೆ, ನನ್ನ ವಯಸ್ಸಿನ ಹುಡುಗರೂ ನಾಡವರ ಮನೆಗಳಿಂದ ಬೇಡಿ ತರುತ್ತಿದ್ದ ಬಿಳಿ ಬಿಳಿಯಾದ ರೊಟ್ಟಿಯ ಹೋಳುಗಳಿಗೆ ಆಸೆಪಟ್ಟು ನಾನೂ ಒಮ್ಮೆ ನಮ್ಮ ಗೆಳೆಯರ ತಂಡದಲ್ಲಿ ಸೇರಿಕೊಂಡು ರೊಟ್ಟಿ ಬೇಡಲು ಹೋಗಿ ಬಂದಿದ್ದೆ. ಕೆಲವು ಮನೆಗಳವರು ನನ್ನನ್ನು ಇಂಥವರ ಮಗ’ ಎಂದು ಗುರುತಿಸಿ ನನ್ನ ಕೈಚೀಲಕ್ಕೆ ಸ್ವಲ್ಪ ಹೆಚ್ಚಿನ ರೊಟ್ಟಿ ಹೋಳುಗಳನ್ನೇ ಅನುಗ್ರಹಿಸಿದ್ದರು! ನನಗೆ ಖುಷಿಯಾಗಿತ್ತು. ಆದರೆ ಮನೆಯಲ್ಲಿ ವಿಷಯ ತಿಳಿದಾಗ ದೊಡ್ಡ ರಂಪವೇ ಆಯಿತು. ಹೇಳಿ ಕೇಳಿ ನಾನೊಬ್ಬ ಸರಕಾರಿ ಸಂಬಳ ಪಡೆಯುವ ಮಾಸ್ತರನ ಮಗ. ನನ್ನಂಥವನು ಬೇಡಲು ನಿಂತದ್ದು ನನಗೂ, ನನ್ನ ತಾಯಿ, ತಂದೆಯರಿಗೂ ಅವಮಾನಕರ ಸಂಗತಿಯೇ. ಅಷ್ಟೆಲ್ಲಾ ಗಂಭೀರವಾಗಿ ಯೋಚಿಸುವ ತಿಳುವಳಿಕೆಯಾದರೂ ಎಲ್ಲಿತ್ತು? ಬರಿಯ ಬಾಯಿ ಚಪಲ ಮತ್ತು ಬೇಡುವುದೂ ಒಂದು ಆಟವೆಂಬಂತೆ ಗೆಳೆಯರೊಡನೆ ಹೊರಟುಬಿಟ್ಟಿದ್ದೆ. ಮನೆಯ ಮಾನ ಕಳೆದನೆಂದು ಅವ್ವ ಅಟ್ಟಾಡಿಸಿ ಹೊಡೆದಳು, ಅಪ್ಪ ಚೆನ್ನಾಗಿ ಬೈದಿದ್ದು, ಅಜ್ಜ ಕಣ್ಣೀರು ಹಾಕಿದ್ದ.             ಆದರೆ ಅಂದು ನಮ್ಮ ಕೇರಿಯ ಜನಕ್ಕೆ ಬೇಡಿಕೆ’ ಎಂಬುದು ಹಸಿವಿನ ಅನಿವಾರ್ಯತೆಯಾಗಿತ್ತು. ಸರಿಯಾಗಿ ಅಕ್ಕಿಯ ಗಂಜಿ ಬೇಯಿಸಿ ತಿಂದರೆ ಅದೇ ಮೃಷ್ಟಾನ್ನ! ಬಹುತೇಕ ಅಕ್ಕಿಯ ನುಚ್ಚಿನ ಗಂಜಿ ಇಲ್ಲವೆ ಅಂಬಲಿ ಕುದಿಸಿ ಕುಡಿದು ದಿನಕಳೆಯುವ ಕೇರಿಯ ಜನಕ್ಕೆ ಮನೆಯಲ್ಲಿ ಒಂದು ದೋಸೆ ಮಾಡಿ ತಿನ್ನುವುದಕ್ಕೂ ಹಬ್ಬದ ದಿನಕ್ಕಾಗಿಯೇ ಕಾಯಬೇಕಿತ್ತು. ಅಂಥವರಿಗೆ ತಾವೇ ದುಡಿಯುತ್ತಿರುವ ಒಡೆಯರ ಮನೆಗಳಲ್ಲಿ ಬೇಡಿ ತಿನ್ನಲು ಯಾವ ಸಂಕೋಚವೂ ಆಗದಿರುವುದು ಸಹಜವೇ ಆಗಿತ್ತು. ಅಲ್ಲದೆ ಊರಿನ ಗ್ರಾಮದೇವತೆ ಮತ್ತು ಮನೆದೇವತೆಗಳ ಪೂಜಾ ದಿನಗಳಲ್ಲಿ ಆಗೇರರು ತಮ್ಮಲ್ಲಿರುವ ಹಲಗೆ ವಾದ್ಯ, ಪಂಚವಾದ್ಯಗಳನ್ನು ಬಾರಿಸುವ ಸೇವೆ ಸಲ್ಲಿಸುತ್ತಿದ್ದರು. ಇದಕ್ಕೆ ದೇವರ ಪ್ರಸಾದವಲ್ಲದೆ ಬೇರೆ ಸಂಭಾವನೆ ನೀಡುತ್ತಿರಲಿಲ್ಲ. ಬಹುಶಃ ಇದೇ ಕಾರಣದಿಂದ ಸಂಕ್ರಾಂತಿ, ಯುಗಾದಿ, ಸುಗ್ಗಿ ಹಬ್ಬದ ದಿನಗಳಲ್ಲಿ ಆಗೇರರು ಬೇರೆ ಬೇರೆ ತಂಡಗಳಲ್ಲಿ ಪಂಚವಾದ್ಯ, ಹಲಗೆವಾದ್ಯಗಳನ್ನು ಮನೆ ಮನೆಯ ಮುಂದೆ ಬಾರಿಸಿ ದುಡ್ಡು, ಭತ್ತ ಅಥವಾ ಅಕ್ಕಿಯನ್ನೇ ಬೇಡಿ ಪಡೆದು ಎಲ್ಲರೂ ಸಮನಾಗಿ ಹಂಚಿಕೊಳ್ಳುತ್ತಿದ್ದರು. ಇದನ್ನು ಬೇಡಿಕೆ’ ಎಂದು ಕರೆದು ಸಾಂಪ್ರದಾಯಿಕ ಆಚರಣೆಯಂತೆಯೇ ನಡೆಸುತ್ತಿದ್ದರು. ಇದಕ್ಕೆ ಸಾಮಾಜಿಕವಾಗಿ ಗೌರವವೂ ಇತ್ತು ಎಂದು ನಾನು ಭಾವಿಸಿದ್ದೇನೆ. ಏಕೆಂದರೆ ಕಾಲಮಾನದ ತೀವೃ ಬದಲಾವಣೆಗೆ ನನ್ನ ಕೇರಿಯೂ ಹೊರತಾಗಲಿಲ್ಲ. ಅಲ್ಲಿ ಶಿಕ್ಷಣ, ರಾಜಕೀಯ, ಸಾಮಾಜಿಕ ಜೀವನ ಕ್ರಮ ಎಲ್ಲದರಲ್ಲಿಯೂ ಬದಲಾವಣೆಗಳಾಗಿವೆ. ಆದರೆ ಕೇರಿಯ ಹಲಗೆವಾದ್ಯ’, ಪಂಚವಾದ್ಯ’ ತಂಡಗಳು ತಮ್ಮ ಅಂದಿನ ಬೇಡಿಕೆ’ಯ ಸಂಪ್ರದಾಯವನ್ನು ಇಂದಿಗೂ ಮುಂದುವರಿಸಿಕೊಂಡೇ ನಡೆದಿವೆ. ************************************* ರಾಮಕೃಷ್ಣ ಗುಂದಿ ಕನ್ನಡದ ಖ್ಯಾತ ಕತೆಗಾರ. ಅವಾರಿ, ಕಡಲಬೆಳಕಿನ ದಾರಿ ಗುಂಟ, ಅತಿಕ್ರಾಂತ, ಸೀತೆ ದಂಡೆ ಹೂವೇ …ಈ ನಾಲ್ಕು ಅವರ ಕಥಾ ಸಂಕಲನಗಳು. ಅವರ ಸಮಗ್ರ ಕಥಾ ಸಂಕಲನ ಸಹ ಈಚೆಗೆ ಪ್ರಕಟವಾಗಿದೆ.‌ಯಕ್ಷಗಾನ ಕಲಾವಿದ.‌ ಕನ್ನಡ ಉಪನ್ಯಾಸಕರಾಗಿ ಅಂಕೋಲಾದ ಜೆ.ಸಿ.ಕಾಲೇಜಿನಲ್ಲಿ ಸೇವೆ ಪ್ರಾರಂಭಿಸಿ, ಕಾರವಾರದ ದಿವೇಕರ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ಯಕ್ಷಗಾನ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಮಗ ಅಮೆರಿಕಾದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್. ಅಗೇರ ಸಮುದಾಯದಿಂದ ಬಂದ ಗುಂದಿ ಅವರು ಅದೇ ಜನಾಂಗದ ಬಗ್ಗೆ ಪಿಎಚ್ಡಿ ಪ್ರಬಂಧ ಮಂಡಿಸಿ, ಡಾಕ್ಟರೇಟ್ ಸಹ ಪಡೆದಿದ್ದಾರೆ‌ . ದಲಿತ ಜನಾಂಗದ ಕಷ್ಟ ನಷ್ಟ ನೋವು, ಅವಮಾನ, ನಂತರ ಶಿಕ್ಷಣದಿಂದ ಸಿಕ್ಕ ಬೆಳಕು ಬದುಕು ಅವರ ಆತ್ಮಕಥನದಲ್ಲಿದೆ. ಮರಾಠಿ ದಲಿತ ಸಾಹಿತಿಗಳ,‌ಲೇಖಕರ ಒಳನೋಟ , ಕನ್ನಡ ನೆಲದ ದಲಿತ ಧ್ವನಿಯಲ್ಲೂ ಸಹ ಇದೆ.‌ ರಾಮಕೃಷ್ಣ ಗುಂದಿ ಅವರ ಬದುಕನ್ನು ಅವರ ಆತ್ಮಕಥನದ ಮೂಲಕವೇ ಕಾಣಬೇಕು. ಅಂತಹ ನೋವಿನ ಹಾಗೂ ಬದುಕಿನ‌ ಚಲನೆಯ ಆತ್ಮಕಥನವನ್ನು ಸಂಗಾತಿ ..ಓದುಗರ ಎದುರು, ‌ಕನ್ನಡಿಗರ ಎದುರು ಇಡುತ್ತಿದೆ

Read Post »

ಅಂಕಣ ಸಂಗಾತಿ, ರಂಗ ರಂಗೋಲಿ

ಅಂಕಣ ಬರಹ ಮುಗಿಲ ಪ್ರೇಮದಿ ಕಳೆಗಟ್ಟಿತು ಇಳೆ ನನ್ನ ಅರಳಿದ ಬೊಗಸೆಯೊಳಗೆ ಅವಳು ಸುರಿದ ಹಣದಲ್ಲಿ  ಮಡಚಿದ ಹತ್ತು, ಐದು, ಎರಡು, ಒಂದರ ‌ನೋಟುಗಳು. ಅಘ್ರಾಣಿಸಿದರೆ ಅವಳ ಬೆವರು ಹಾಗೂ ಹಸುಗಳ ಉಸಿರನ ಪರಿಮಳ ಬೆರೆತುಬಂದಂತೆ. ಆ ದಿನ ಬೆಳಗ್ಗೆ ನನ್ನಜ್ಜಿ ನನ್ನನ್ನು ಹತ್ತಿರ ಕರೆದು ಕೂರಿಸಿಕೊಂಡಳು “ಬಾಳೀ, ನಿನ್ನ ಶಾಲೆಯಲ್ಲಿ ಇವತ್ತು ಗಮ್ಮತ್ತು ಅಲ್ವಾ. ನೀನು ಕಲಾವಿದೆ. ತಗೋ 100 ರೂಪಾಯಿ. ಇವತ್ತು ಹೊಸ ದಿರಿಸು ತಗೋ. ನಿನ್ನಿಷ್ಟದ್ದು. ಅದನ್ನು ಹಾಕಿಕೊಂಡು ಹೋಗು. ನೋಡು,ನಿನ್ನ ಖುಷಿ  ಮತ್ತಷ್ಟು ಜಾಸ್ತಿಯಾಗಲಿ.” ಆಗೆಲ್ಲ ಹೊಸ ವಸ್ತ್ರ ಬರುವುದು ವರ್ಷಕ್ಕೊಮ್ಮೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ. ಈಗ ಸಿಕ್ಕಿದ್ದು ಬೋನಸ್. ಅದು ನನ್ನಜ್ಜಿ ಹಾಲು ಮಾರಿ ಬಂದ ಹಣದಲ್ಲಿ ಉಳಿತಾಯ ಮಾಡಿದ ಕಾಸು. ಅವಳ ಕಣ್ಣಲ್ಲಿ ನನಗಾಗಿ ಬೆಳಗುವ ದೀಪಾವಳಿ. ಅಮ್ರಪಾಲಿ ನಾಟಕದ ಗುಂಗಿನಲ್ಲಿ ನನ್ನ ಶಾಲಾ ದಿನಗಳು ಚಿಗುರುತ್ತಲೇ ಇದ್ದವು. ಶಾಲೆಯ ಪಕ್ಕದಲ್ಲಿ ಕೆರೆ- ದಡ ಆಟಕ್ಕೆ ಮಕ್ಕಳು ಕೈಕೈ ಬೆಸೆದು ನಿಂತಂತೆ ,ರೈಲಿನ ಬೋಗಿಗಳ ಕೊಂಡಿ ಹೆಣೆದಂತೆ ಒಂದೇ ಬಣ್ಣ ಬಳಿದುಕೊಂಡ ಉದ್ದನೆಯ ಸಾಲು ಸಾಕು ಮನೆಗಳು. ಕೊಂಡಿ ಸಿಕ್ಕಿಸಿದಂತೆ ನಡುನಡುವೆ ಹದಿಹರೆಯದ ಪೇರಳೆ ಗಿಡಗಳು. ಒಂದೊಂದು ಮನೆಯ ಕಿಟಕಿ, ಬಾಗಿಲಿಗೆ ಮನಸ್ಸು ಆನಿಸಿದರೆ‌ ಮೆಲ್ಲಮೆಲ್ಲನೆ ಒಂದೊಂದು ಬಗೆಯ, ರುಚಿಯ ಕಥೆಗಳು ಆಕಳಿಕೆ ಮುರಿದು ತೆರೆದುಕೊಳ್ಳುತ್ತವೆ. ಅಲ್ಲಿ ರಂಗಿನೊಡನೆ ಸ್ಪರ್ಧಿಸುವ ಹೂವುಗಳು,  ಹೂಗಳನ್ನು ನೇವರಿಸುವ ಹುಡುಗಿಯರು. ಸಂಜೆಯ ಹೊತ್ತು ಮನೆಗಳ ಹಿಂದೆ ಇರುವ ಖಾಲಿ ಜಾಗದಲ್ಲಿ  ಹುಡುಗರು, ಗಂಡಸರು ವಾಲಿಬಾಲ್ ಆಟ ಆಡಿದರೆ ಹುಡುಗಿಯರು ಸೇರಿಕೊಂಡು ಕಾಲೇಜಿನಲ್ಲಿ ನಡೆದ ಪ್ರಸಂಗಗಳು, ಹುಡುಗರ ಕೀಟಲೆ, ತಮ್ಮ ಪ್ರತಿಕ್ರಿಯೆ, ಹೀಗೆ ರಾಶಿ ಮಾತುಗಳನ್ನು ಪೇರಿಸಿ ಕೆನ್ನೆ ಕೆಂಪಾಗಿಸಿ ಮನಸ್ಸಿಗೆ ಯಾವು ಯಾವುದೋ ಹೊಸ ಹೊಸ ಕುಡಿಮೀಸೆಯ ಮುಖಗಳನ್ನು ತೂಗು ಹಾಕುತ್ತಿದ್ದರು. ಒಂದು ವಾರ ಬಿಟ್ಟು ನೋಡಿದರೆ ಆ ಮಾತಿನ ಒಂದಿಷ್ಟೂ ಗುರುತು ಸಿಗದಂತೆ ನವನವೀನ ಪ್ರಸಂಗಗಳು, ಜುಳುಜುಳು ನಗೆ, ಗಲಗಲ ಮಾತು ಹರಿಯುತ್ತಿತ್ತು.  ಅದೆಷ್ಟು ಹುಡುಗಿಯರು ಮಂಜುಳ, ಕವಿತಾ, ಮೀನಾ,ಸರೋಜ,ಮಲ್ಲಮ್ಮ ಎಲ್ಲರೂ ಆ ಸರಕಾರಿ ವಸತಿಗೃಹಗಳ ಜೀವ ಕುಸುಮಗಳು. ಅವರ ಅಣ್ಣ, ಅಪ್ಪ, ಚಿಕ್ಕಪ್ಪ, ಮಾವ ಹೀಗೆ ಮನೆಯ ಸದಸ್ಯರೊಬ್ಬರು ಸರಕಾರಿ ಹುದ್ದೆಯಲ್ಲಿದ್ದ ಕಾರಣ ಆ ಸರಪಳಿ ಸಿಕ್ಕಿಸಿ ನಿಂತ ಮನೆಗಳಲ್ಲಿ ಇವರಿದ್ದಾರೆ.  ನಮ್ಮೂರು ಅವರಿಗೆ ಸಾಕುತಾಯಿ.  ಅಲ್ಲೇ ಆ ದೊಡ್ಡ ಬೇಲಿಯ ಗಡಿ ದಾಟಿ‌ರಸ್ತೆಗೆ ಬಂದು ನಿಂತರೆ ಆಗಷ್ಟೆ ಸಣ್ಣ ಹಾಡಿಯಂತಿದ್ದ ಜಾಗ ಸಮತಟ್ಟಾಗಿ ಗೆರೆಮೂಡಿಸಿ ಮೂರು ಮನೆಗಳು ತಲೆಎತ್ತಿ ಕೂತಿದೆ. ಅದರಲ್ಲೊಂದು‌ ನಮ್ಮ‌ಮನೆ. ಹತ್ತರ ಪಬ್ಲಿಕ್ ಪರೀಕ್ಷೆಯ ಗೇಟು ದಾಟಿ ಬಾಲ್ಯದ ಭಾವಗಳನ್ನು ಕಳಚಿ ಪೀಚಲು ಕನಸಿನ ಜೋಳಿಗೆ ಬಗಲಲ್ಲಿಟ್ಟು ಕಿರಿಯ ಕಾಲೇಜಿನ ವಿದ್ಯಾರ್ಥಿಯಾಗಿದ್ದೆ. ಕಣ್ಣಿಗೆ ಕಾಣುವ ಬಣ್ಣಗಳಿಗೆ ನೂರೆಂಟು ತಡೆಗೋಡೆಗಳು. ಆದರೂ ಮೂಲೆ ಮೂಲೆಯ ಕಚಗುಳಿ ಮುಚ್ಚಟೆಯಾಗಿ ಎದೆಗಾನಿಸಿ ಸುಳ್ಳುಪೊಳ್ಳು ನಗೆಯಿಂದ ರಂಗೋಲಿ ಅರಳುತ್ತಿತ್ತು. ಚುಕ್ಕಿಚುಕ್ಕಿಗಳ ಸೇರ್ಪಡೆಯಿಂದ ವಿಸ್ತರಿಸುತ್ತಿತ್ತು. ಈ ಚುಕ್ಕಿಗಳದ್ದೇ ರಾಜ್ಯ ಅಲ್ಲಿ. ಆ ಸಮವಸ್ತ್ರತೊಟ್ಟ ಮನೆಗಳ ಸಾಲಿನಲ್ಲಿತ್ತು. ಅಲ್ಲಿಗೆ ಸಂಜೆಯ ಸಮಯ ಮೆಲ್ಲಡಿಯಿಡುತ್ತ ಹೋಗುವುದು. ಸುಮ್ಮಸುಮ್ಮನೆ ಹೋಗುತ್ತಿರಲಿಲ್ಲ. ಹಾಗೆ ಹೋಗುವುದಕ್ಕೂ ಬಲವಾದ ಕಾರಣ ವೂ ಇತ್ತು. ಆ ಸಮಯ ನನ್ನಜ್ಜ ಅಜ್ಜಿ ಒಂದಷ್ಟು ದನಗಳನ್ನು ಸಾಕುತ್ತಿದ್ದರು. ಆ ದನಗಳು ನಮ್ಮ‌ಮನೆಯ ಆರ್ಥಿಕ ಜವಾಬ್ದಾರಿಯನ್ನು ವಹಿಸಿಕೊಂಡಿದ್ದವು. ಸಂಜೆ ಕಾಲೇಜಿನಿಂದ ಬಂದ‌ ನನಗೆ ಈ ಬೇಲಿಯೊಳಗಿನ ಮನೆಮನೆಗಳಿಗೆ ಹಾಲು ಸರಬರಾಜು ಮಾಡುವ ಕೆಲಸ.  ಇದು ಎರಡು ಮೂರು ಟ್ರಿಪ್ ಆಗುವುದೂ ಇದೆ. ಎರಡೂ ಕೈಗಳಲ್ಲಿ ಹಾಲು ತುಂಬಿದ ತಂಬಿಗೆಯ ಬಾಯಿಗೆ ನನ್ನ ಬೆರಳುಗಳ ಮುಚ್ಚಳ ಸೇರಿಸಿ ಹೋಗುತ್ತಿದ್ದೆ. ಮನೆ ಮನೆಯ ಬಾಗಿಲಲ್ಲಿ ನಿಂತು ” ಹಾಲೂ..” ಎಂದು ಮನೆಯವರನ್ನು ಕೂಗುವುದು. ಅಮ್ಮನಂತವರು,ಅಕ್ಕನಂತವರು ಮಾತ್ರವಲ್ಲ ಅಪರೂಪಕ್ಕೆ ಹುಲಿಕಣ್ಣಿನ ಗಂಡುಗಳೂ ಆ ಮನೆಯ ಗುಹೆಗಳಲ್ಲಿ ಕಂಡಿದ್ದೂ ಇದೆ. ಇಲ್ಲಿಯೇ ಬಿಳೀ ಬಣ್ಣದ ದಪ್ಪ ದೇಹದ ನಳಿನಿ ಆಂಟಿ ನನಗೆ ಬದುಕಿನ ಮೊದಲ ವ್ಯಾನಿಟಿ ಬ್ಯಾಗ್ ಕೊಟ್ಟು ನಕ್ಕಿದ್ದರು. ಎಂತಹ ಖುಷಿಯದು. ಗಾಢ ನೀಲಿ ಬಣ್ಣದ ಜಂಭದ ಚೀಲ. ಅದುವರೆಗೆ ಪುಸ್ತಕಗಳನ್ನು ಕೈಯಲ್ಲಿ ಹಿಡಿದು ಅದನ್ನು ಎದೆಗಾನಿಸಿಕೊಂಡು ಹೋಗುತ್ತಿದ್ದೆ. ಈಗ ಪುಸ್ತಕಗಳಿಗೂ ವಿಶ್ರಾಂತಿಗೆ, ಪಯಣಕ್ಕೊಂದು ಗೂಡು. ಚಲಿಸುವ ಮನೆ ಸಿಕ್ಕಿತು.  ಈ ಬಾಗಿಲು ತಟ್ಟುವ ಕಾಯಕ  ಮುಗಿಸಿದ ನಂತರ ಸ್ವಲ್ಪ ಹೊತ್ತು ಹೆಣ್ಮಕ್ಕಳ ಮೀಟಿಂಗ್. ನನಗಿಂತ ಒಂದು, ಎರಡು ವರ್ಷ ಕಿರಿಯರು, ಹಿರಿಯರು ಪಾಲ್ಗೊಳ್ಳುವ ಸಭೆಯದು. ಪ್ರತಿಯೊಂದು ಕುಸುಮ ಕುಸುಮಿಸುವ ಪರಿ ಭಿನ್ನ. ಇಳೆ ಒರತೆ ತುಂಬಿಕೊಳ್ಳುವ ಕಾಲ. ನಮ್ಮ ಶಾಲೆ ಕಾಲೇಜುಗಳೂ ಬೇರೆಬೇರೆ. ನಾವು ಈ ಹುಡುಗರು ವಾಲಿಬಾಲ್ ಆಡುವ ಜಾಗದ ಒಂದು ಮೂಲೆಯಿಂದ ಆಚೀಚೆ ಹೋಗುವ ಪ್ರಸಂಗಗಳೂ ಇದ್ದವು. ಆಗೆಲ್ಲ ಅವ್ಯಕ್ತ ಕಂಪನಕ್ಕೆ ಕಳೆಗಟ್ಟುವ ಎಳೆ ಮನಗಳು ನಮ್ಮವು. ತಲೆಎತ್ತಿ ಅಲ್ಲಿರುವ ಗಂಡುಹುಡುಗರಿಗೆ ದೃಷ್ಟಿ ಕೂಡಿಸುವ ದಾರ್ಷ್ಟ್ಯವು  ಆ ನಾಜೂಕು ಹುಡುಗಿಯರಿಗೆ ಇರಲಿಲ್ಲ. ಆ ಹುಡುಗರೂ ಜೋರಾಗಿ ದೂರು ಕೊಡುವ ಮಟ್ಟದ ಕೀಟಲೆ ಮಾಡಿದ್ದೂ ಇಲ್ಲ.  ಈ ನಮ್ಮಹುಡುಗಿಯರ ಬೈಠಕ್ ನಲ್ಲಿ ಒಂದು ವಿಶೇಷತೆಯಿತ್ತು. ನಮ್ಮ ಜೊತೆ ಬಿಂದು ಎಂಬ ಒಬ್ಬ ಹುಡುಗನಿದ್ದ.  ರಂಗಕ್ಕೆ ಎಳೆದೊಯ್ದರೆ ಕೃಷ್ಣನ ಪಾತ್ರಕ್ಕೆ ಹೊಂದುವಂತಹ ಮುಖ. ನಸುಗಪ್ಪು ಬಣ್ಣ. ನಗುತುಂಬಿದ ಕಣ್ಣುಗಳು.  ನಮ್ಮೆಲ್ಲರಿಗೂ ಆತ್ಮೀಯ ಸ್ನೇಹಿತ. ನಮ್ಮ ಹೆಚ್ಚಿನ ಮಾತುಗಳಿಗೆ ನಮ್ಮ ಭಾವ ತುಡಿತಗಳೊಂದಿಗೆ ಒಂದಾಗುವ, ಸಲಹೆ ನೀಡುವ ಗೆಳೆಯ. ಬಲು ಚಿಕ್ಕವನಿರುವಾಗ ಪೋಲಿಯೊದಿಂದ ಒಂದು ಕಾಲು ತುಸು ಎಳೆದಂತೆ ನಡೆದಾಡುತ್ತಿದ್ದ. ಹುಡುಗರ ಆಟಕ್ಕೆ ಅವನು ನಿಷೇದಿಸಲ್ಪಟ್ಟಿದ್ದ.   ಆ ಸಮಯದಲ್ಲಿ ನಾನು ಗುಂಪಿನ ಒಳ್ಳೆಯ ಕೇಳುಗಳು. ಜೊತೆಗೆ ಉಳಿದವರಿಗಿಂತ ಚೂರು ಕಮ್ಮಿ ಕಥೆಗಳು ನನ್ನಲ್ಲಿ ಶೇಖರಿಸಲ್ಪಟ್ಡಿದ್ದವು. ಅಲ್ಲದೆ ಕಥೆಯ ಅಂಚಿಗೆ ಬಂದು ಕೂರುವ ಭಾವಗಳೂ ಎದೆಕಡಲಿನಿಂದ ನೆಗೆದು ಹೊರಬರಲು ಹವಣಿಸಿದರೂ ತುಟಿಗಳಿಗೆ ಅದೃಶ್ಯ ಹೊಲಿಗೆ ಹಾಕಿದಂತಾಗಿ ಮೌನದ ನಾದಕ್ಕೆ ಮನ ಜೋಡಿಸಿಕೊಂಡಿದ್ದೆ. ಭಾವನ ತಮ್ಮನೊಂದಿಗಿನ ಒಲವಿನ ಮಾತು, ಕದ್ದು ಕೊಟ್ಟ ಮುತ್ತು, ಸಿಹಿ ಮಾತನಾಡಿ ಬೇರೆ ಹೆಣ್ಣಿನ ಚಿತ್ರ ತೋರಿಸಿದ ಅತ್ತಿಗೆಯ ತಮ್ಮ,  ಕಾಲೇಜಿಗೆ ಬಂದ ವಿದೇಶಿ ವಿದ್ಯಾರ್ಥಿ ಅವನೊಂದಿಗೆ ಬದಲಾಯಿಸಿಕೊಂಡ ಪುಸ್ತಕ, ಚಾಕಲೇಟು, ಬಸ್ ನಿಲ್ದಾಣದವರೆಗಿನ ಜೊತೆ ಹೆಜ್ಜೆಗಳು ಹೀಗೇ  ಏನೇನೋ ಹಂಚಿಕೆಗಳು ಮಾತಿಗೆ ಕಂಪು ಬೆರೆಸುತ್ತಿದ್ದವು.  ಮೊದಲ ವರ್ಷದ ಪಿ.ಯು.ಸಿ ಇರುವಾಗ ಮತ್ತೆ ಬಂದಿತು ವಾರ್ಷಿಕೋತ್ಸವ. ಸಂಭ್ರಮವೋ ಸಂಭ್ರಮ. ನಾನೀಗ ಹಿರಿಯ ವಿದ್ಯಾರ್ಥಿನಿಯರ ಪಟ್ಡಿಯಲ್ಲಿದ್ದೆ.  “ಸ್ಕೂಲ್ ಡೇ” ಅಂದರೆ ನಾಟಕವಿದೆ. ನಾಟಕ ಇದ್ದ ಮೇಲೆ ನಾನೂ ಇರಲೇಬೇಕು. ಮನಸ್ಸು ತಕತಕ ಕುಣಿಯುತ್ತಿತ್ತು.  “ಬೌಮಾಸುರ” ಎಂಬ ನಾಟಕ. ಬೌಮಾಸುರ ದ್ವಿತೀಯ ಪಿ.ಯು. ವಿದ್ಯಾರ್ಥಿನಿ. ಎತ್ತರಕ್ಕಿದ್ದಳು. ಅವಳ ಸ್ವರವೇ ತುಸು ಗಡಸು. ನನಗೆ ಪ್ರಥ್ವೀದೇವಿ ಪಾತ್ರ. ಸೌಮ್ಯ ಪಾತ್ರ, ಪುಟ್ಟ ದೇಹದ ನಾನು ಭೂತಾಯಿ. ಬೌಮಾಸುರನ ಮಾತೆ.  ರಿಹರ್ಸಲ್ ಗಳು ಆರಂಭವಾದವು. ಮೇಘರಾಜನಿಗೆ ಪ್ರಥ್ವೀದೇವಿಯಲ್ಲಿ ಪ್ರೀತಿ ಅಂಕುರಿಸಿ ಜಲಲ ಝಲಲ ಜಲಧಾರೆ. ನೆಲ.ಮುಗಿಲಿನ ಸಂಗಮಕೆ ಜನಿಸಿದ ಅಸುರ ಭೌಮಾಸುರ. ಆಗೆಲ್ಲ ಕಾಲೇಜಿನ ಕಾರಿಡಾರ್ ನಲ್ಲಿ ನಾನು ನಡೆಯುತ್ತಿದ್ದರೆ ನನ್ನ ನಡೆಯ ಶೈಲಿಯೇ ಬದಲಾದಂತೆ ಮನಸ್ಸಿಗೆ ಅನಿಸುತ್ತಿತ್ತು. ನಾನು ಬೇ..ರೆಯೇ, ಇವರೆಲ್ಲರಿಗಿಂತ ಭಿನ್ನ, ನಾನು ಪ್ರಥ್ವೀದೇವಿ. ಕನಸಿನಲ್ಲೇ ನನ್ನ ಇರುವಿಕೆ. ಊಟ, ತಿಂಡಿ, ಓದು ಎಲ್ಲವೂ. ಒಂದು ಸುಂದರ ರಾಗ, ಪಾತ್ರಾನುರಾಗ ನನ್ನ ಜೀವವನ್ನು ತೊನೆದಾಡಿಸುತ್ತಿತ್ತು. ವಾರ್ಷಿಕೋತ್ಸವದ ದಿನ ನಮಗೆ‌ ಸಂಜೆ ಆರುಗಂಟೆಗೆ ಬರುವಂತೆ ಸೂಚನೆ ನೀಡಲಾಗಿತ್ತು.  ಹಗಲಲ್ಲೂ ಸಣ್ಣ ಹೆದರಿಕೆಯ ಜೊತೆ ಬೆಸೆದುಕೊಂಡ ದೊಡ್ಡ ಸಂತಸದಲ್ಲಿ ಆಡುತ್ತಿದ್ದೆ. ಮನೆಯಲ್ಲಿ ಯಾರಾದರೂ ಕುಡಿಯಲು ನೀರು ತರಲು ಹೇಳಿದರೂ ಹೋದವಳು ಅಲ್ಲಲ್ಲೇ ಸ್ತಬ್ದಳಾಗಿ ಮನಸ್ಸಿನಲ್ಲಿ ಪ್ರಥ್ವಿದೇವಿಯ ಮಾತುಗಳೇ ಕುಣಿದು, ಮುಖ, ಕಣ್ಣಿನಲ್ಲಿ ಅದರ ಪ್ರತಿಫಲನ. ಮನೆಯವರು ಹತ್ತಿರ ಬಂದು ಎಚ್ಚರಿಸಬೇಕು.  ಈ ಸಂದರ್ಭದಲ್ಲಿಯೇ, ನನ್ನ ಉಡುಪಿಗಾಗಿ, ಅಜ್ಜಿ ಮಡಿಲು ಬಸಿದು ಕೊಟ್ಟದ್ದು ನೂರು ರುಪಾಯಿ. ಅದುವರೆಗೂ ನಾನು ಅಂಗಡಿಗೆ ಹೋಗಿ ಡ್ರೆಸ್ ತಗೊಂಡವಳಲ್ಲ. ಏನಿದ್ದರೂ ಮನೆಯಲ್ಲಿ ತಂದದ್ದು, ಇಲ್ಲವಾದರೆ ಬಾಬಣ್ಣನ ಅಂಗಡಿಯಲ್ಲಿ ಮಾವನವರ ಹಳೆಯ ಪ್ಯಾಂಟ್ ಕೊಟ್ಟು ಅದರಲ್ಲಿ ಸ್ಕರ್ಟ್ ಅವರ ಷರ್ಟ್ ನಲ್ಲಿ ಬ್ಲೌಸ್ ಹೊಲಿಸುವುದು ವಾಡಿಕೆ.  ” ಅಮ್ಮಾ ಯಾರು ತಂದು ಕೊಡ್ತಾರೆ..”ಅಂತ ನಾನಂದರೆ,”ನೀನೇ ಪ್ರಭಾವತಿ ಒಟ್ಟಿಗೆ ಹೋಗಿ ತಾ”ಎಂದಳು. ನಮ್ಮ ಮನೆಯ ಹಿಂದೆ ಗೆಳತಿ ಪ್ರಭಾ ಮನೆ. ಓಡಿದೆ. ಅವಳು ಅವಳಮ್ಮನ ಹತ್ತಿರ ಒಪ್ಪಿಗೆ ಪಡೆದು ಇಬ್ಬರೂ ಸೇರಿ ರೆಡೆಮೇಡ್ ಬಟ್ಟೆ ಅಂಗಡಿಗೆ ಹೋದೆವು. ರಾಶಿ ಹಾಕಿದ ಡ್ರೆಸ್ಸಗಳ ನಡುವೆ ಆರಿಸುವುದು ಹೇಗೆ? ಆಗೆಲ್ಲ ಟ್ರಾಯಲ್ ರೂಮ್ ಗೆ ಹೋಗಿ ದಿರಿಸಿನ ಅಳತೆ ಸರಿಯಾಗಿದೆಯೇ ಎಂದು ಪರೀಕ್ಷೆ ಮಾಡಿ ಕೊಳ್ಳಲು ಸಾಧ್ಯ ಎಂಬುದು ನಮ್ಮ ಅರಿವಿನ ಸರಹದ್ದಿಗಿಂತಲೂ ಬಹಳ ದೂರದ ಮಾತು.  ಒಟ್ಟಾರೆ ಗೊಂದಲ. ಕೊನೆಗೂ ಕಡುಕೆಂಪು ಬಣ್ಣದ ಚೂಡೀದಾರ ಆರಿಸಿ  ಬಹಳ ಸಂಭ್ರಮದಿಂದ ಮನೆಗೆ ಬಂದೆವು. ಮನೆಗೆ ಬಂದು ಹಾಕಿದರೆ ನಾನು, ಪ್ರಭಾವತಿ ಇಬ್ಬರೂ ಅದರ ಬಸಿರಲ್ಲಿ ಆಶ್ರಯ ಪಡೆಯಬಹುದು. ಅಷ್ಟು ಅಗಲದ ಕುರ್ತಾ, ಕೆಳಗೆ ದೊಗಳೆ ಪ್ಯಾಂಟ್. ಬೆರ್ಚಪ್ಪನಿಗೆ ಅಂಗಿ ತೊಡಿಸಿದಂತೆ ಕಾಣುತ್ತಿದ್ದೆ. ಆದರೇನು ಮಾಡುವುದು ಸಂಜೆಯಾಗಿದೆ. ಒಳಲೋಕದಲ್ಲಿ ಪ್ರಥ್ವೀದೇವಿಯ ಗಲಾಟೆ ನಡೆಯುತ್ತಲೇ ಇದೆ. ಗೆಳತಿಯರಿಗೆಲ್ಲ ಬರಲು ಒತ್ತಾಯಿಸಿ ಆಗಿದೆ. “ಬಿಂದು” ನನ್ನ ಜೊತೆಗೆ ನನ್ನ ನಾಟಕದ ಕೆಲವುಸಾಮಾಗ್ರಿಗಳ ಚೀಲ ಹಿಡಿದು ತಯಾರಾದ. ಅವನಿಗೆ ನನಗಿಂತ ಹೆಚ್ಚಿನ ಉತ್ಸಾಹ, ತಳಮಳ.  ಗಳಿಗೆ ಗಳಿಗೆಗೆ ನೆನಪಿಸುತ್ತಿದ್ದ. ಚೆಂದ ಮಾಡು ಮಾರಾಯ್ತೀ, ಚೆಂದ ಮಾಡು. ಎಲ್ಲರಿಗಿಂತ ನಿನ್ನ ಆಕ್ಟ್‌ ಚೆಂದ ಆಗಬೇಕು. ಅಜ್ಜಿಯ ಕಾಲಿಗೆ ವಂದಿಸಿ ನಾವು ಹೊರಟೆವು. ಮಂದ ಕತ್ತಲು ಇಳಿಯುತ್ತಿತ್ತು. ಹೊಸ ಚೂಡೀದಾರದ ಪರಿಮಳ ಹೊಸತನದ ನಶೆ ಬೀರುತ್ತಿತ್ತು. “ತಡವಾಯಿತು.. ಬೇಗ ಬಿಂದೂ”ಎಂದು ವೇಗದ ಹೆಜ್ಜೆ ಹಾಕುತ್ತಿದ್ದೆ.  ಮುಖ್ಯರಸ್ತೆಗೆ ಇನ್ನೇನು ತಲುಪಿದೆವು ಅನ್ನುವಾಗ ” ಫಟ್” ಎಂದಿತು. ನಾನು ಥಟ್ಟನೆ ನಿಂತೆ. ಪಾದಗಳು ಒಂದಕ್ಕೊಂದು ಜೋಡಿಸಿದಂತೆ ಇಟ್ಟಿದ್ದೆ. ದೀನಳಾಗಿ ಸ್ನೇಹಿತನ ಮುಖ ನೋಡಿದೆ. ಅವನಿಗೇನೂ ಅರ್ಥವಾಗ ” ಎಂತಾಯ್ತು, ಹೋಗುವ ಮಾರಾಯ್ತಿ” ಎನ್ನುತ್ತಾನೆ. ಎಲ್ಲಿಗೆ ಹೋಗುವುದು. ಹೆಜ್ಜೆ ಮುಂದಿಡುವುದು ಸಾಧ್ಯವೇ ಇಲ್ಲ. ಚೂಡಿದಾರದ ಪ್ಯಾಂಟಿನ ಲಾಡಿ ಒಳಗೇ ತುಂಡಾಗಿ ಬಿಟ್ಟಿದೆ. ಹಾಗೇ ನಿಲ್ಲುವ ಹಾಗಿಲ್ಲ. ಮುಂದೆ ಹೋಗುವ ಹಾಗೂ ಇಲ್ಲ.ಪ್ಯಾಂಟ್ ಕೆಳಗೆ ಬೀಳುವ ಹೆದರಿಕೆ. ವಿಪರೀತ ಭಯದಲ್ಲಿ ಕಣ್ಣು ತುಂಬಿತ್ತು.  ” ಬಿಂದೂ..” ಏನು ಹೇಳುವುದು..ಸರಿಯಾಗಿ ಹೇಳಲೂ ಆಗದೇ “ಪ್ಯಾಂಟ್ ತುಂಡಾಯಿತು”  “ಬೇಗ ಬೇಗ ನಡೀ ಕಾಲೇಜಿಗೆ ಎಂದ. ನನ್ನ ಸಂಕಟ ಹೆಚ್ಚುತ್ತಿತ್ತು. ಹೊಟ್ಟೆ ನೋವಿನಿಂದ ನರಳುವವರ ಹಾಗೆ ಪ್ಯಾಂಟ್ ಬೀಳದಂತೆ ಹೊಟ್ಟೆ ಹಿಡಿದುಕೊಂಡೆ. ಆದರೆ ನಡೆಯುವುದು ಕಷ್ಟ. ಊರೆಲ್ಲ ನನ್ನನ್ನೇ ನೋಡುವುದು ಎಂಬ ಭಾವದಿಂದ ನಾಚಿಕೆ,ಅವಮಾನದ ಸಂಕಟದಿಂದ ಬಿಕ್ಕಳಿಸತೊಡಗಿದೆ. “ಎಂತಾಯ್ತ..ಎಂತಾಯ್ತಾ” ಕೇಳುತ್ತಿದ್ “ನಡೆಯಲು ಆಗುವುದಿಲ್ಲ” ಎಂದೆ. ಸುತ್ತ ನೋಡಿದ. ಅಲ್ಲಿ ಮೂಲೆಯಲ್ಲಿ ಪಾಳು ಬಿದ್ದ ಚಿಕ್ಕ ಅಂಗಡಿಯಂತಹ ಮನೆಯಿತ್ತು. ಆದರೆ ಅದು ಮುಖ್ಯರಸ್ತೆಯ ಬಳಿಯಲ್ಲೇ.” ಬಾರಾ..ಅಲ್ಲಿ ನಾನು ಅಡ್ಡ ನಿಲ್ತೇನೆ. ನೀನು ಏನಾದರೂ ಸರಿ ಮಾಡು”. ಎಂದ. ಅರೆ ಜಾರಿದ ಡ್ರೆಸ್ ಕುರ್ತಾದ ಮೇಲಿನಿಂದ ಮುಷ್ಠಿಯಲ್ಲಿ ಹಿಡಿದಂತೆ ಹಿಡಿದು

Read Post »

You cannot copy content of this page

Scroll to Top